ಕಾರ್ಮಿಕ
ಕವಿತೆ ಕಾರ್ಮಿಕ ಆನಂದ ಆರ್ ಗೌಡ ತಾಳೇಬೈಲ್ ಹೊತ್ತಿನ ಹಸಿವು ನೀಗಿಸಲುಸವೆದ ಶ್ರಮ ಬೆಮರಾಗಿ ಮುತ್ತಿಡುತ್ತಿದೆವಾಸವಿಯ ಹಣೆಗೆ ನಿನ್ನ ಅಳುಕು ನಿನ್ನ ಫೋಟೋಜಗವೇ ತೆಗೆದು ತುರುಕಿದೆ ಗ್ಯಾಲರಿಗೆನೀನು ನೀನೆಂದು ಸಾರಲು ನೀ ಮಾತ್ರ ಕೋಲೆಬಸವಕೊಟ್ಟ ಬಟ್ಟೆಗೆ ಇಟ್ಟ ಕೂಲಿಗೆ ಬಸವಳಿದರೂಅವರ ಇನಾಮಿಗೆ ಸಲಾಮು ನಿನ್ನದು ಶ್ರಮದ ಫಲ ತಟ್ಟೆ ತುಂಬಲಿಲ್ಲಕೊಟ್ಟ ಪಂಚೆ ಮಾನ ಮುಚ್ಚುತ್ತಿಲ್ಲಕಾಯಕಕಂಟಿದ ಚಟ ಚಟ್ಟವೇರಲು ಕಾದಿದೆ ಈ ಜೀತ ಜೀವ ಹಿಂಡಿದರುಮುಕ್ತಿ ಪಡೆಯಲು ಪ್ರೇರಕವಾಗಿಲ್ಲಮೋಕ್ಷವೇ ಹಸಿವಾಗಿ ಪ್ರೇತವಾಗಿ ಕಾಡಿದೆ ಬೆವರ ಕೈಗಳು ತೊಳೆವ ಕೊಳೆಯುಸಿರಿಯ ನುಂಗಿ ಪುಂಗಿ ಊದುವಪುಢಾರಿ ಬಾಯಿ ಕಾಯಕವೇ ಕೈಲಾಸವೆಂದಿದೆ ಗಂಧದ ಪರಿಮಳ ಅರಿಯದ ಕಲ್ಲುತಾನು ತೇಯ್ಸಿಕೊಂಡು ಸವೆದರುಮೈಯೊಡ್ಡಿದ ಕೀರ್ತಿ ಬದುಕಿಸಿದೆ ವಲ್ಲಿಗೆ ಶುಭ್ರ ಅರಿವೆ ತೊಡಿಸುವಅವರ ರೆಟ್ಟೆಗಟ್ಟಿಗೊಳಲಿಬಯಕೆ ಜೇನಾಗಲಿ *****************









