ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ಮಾಲತಿ ಹೆಗಡೆ ಇಳೆಯ ಕೊಳೆಯನು ತೊಳೆದು ಹರಸಿದೆ ಮುಂಗಾರು ಮಳೆಕಂಗೆಟ್ಟ ರೈತರ ಕಣ್ಣಲ್ಲಿ ಕನಸು ಬಿತ್ತುತ್ತದೆ ಮುಂಗಾರು ಮಳೆ‌‌ ಬಿರು ಬಿಸಿಲ ಕಡು ತಾಪದಲಿ ಬೆಂದಿವೆ ಜೀವಕೋಟಿಎಲ್ಲರ ಬಾಳಿಗೆ ಭರವಸೆಯಾಗಿ ಬೀಳುತ್ತದೆ ಮುಂಗಾರು ಮಳೆ ಕಾದು ಕಾದು ಬಿರಿದ ಭುವಿಯ ತಣಿಸಲು ಬೇಕು ವರ್ಷಧಾರೆಮಣ್ಣಿನಲಿ ಅವಿತ ಬೀಜವ ಮೊಳೆಯಿಸುತ್ತದೆ ಮುಂಗಾರು ಮಳೆ ಕರಿಮುಗಿಲು ಕರಕರಗಿ ಹನಿ ಮುತ್ತಾಗಿ ಬೀಳುವುದೇ ಸೊಗಎಷ್ಟೇ ಅಬ್ಬರಿಸಿ ಬೊಬ್ಬಿದರೂ ಹಿತನಿಸುತ್ತದೆ ಮುಂಗಾರು ಮಳೆ ಮಾಲತಿಯ ಮನದಲ್ಲಿ ತುಂಬಿತ್ತು ಸಾವು ನೋವಿನ ಭೀತಿಹೊಸ ಹಸುರ ಹುಟ್ಟಿನ ಹರುಷ ಹಂಚುತ್ತದೆ ಮುಂಗಾರು ಮಳೆ ************

ಗಝಲ್ Read Post »

ಕಾವ್ಯಯಾನ

ಮನುಜ ಮತ

ಕವಿತೆ ರೇಶ್ಮಾಗುಳೇದಗುಡ್ಡಾಕರ್ ಗೆಲ್ಲ ಬೇಕಿದೆ ಕ್ಷಣ ಕ್ಷಣಕ್ಷಣಕೂಹೊಸ ಅವತಾರದಿದಂದ ಮರಳುಮಾಡುವಹನಿ ವಿಷಕೂ ಹೆಣದ ಹೊಳೆಹರಿಸುವಅಂತರಂಗದ ಯುದ್ದವ ನೆಡ ಬೇಕಿದ ಮಾನವೀಯತೆ ಸಸಿಯಬೆಳಸಿ ಉಳಿಸ ಬೇಕಿದೆ ಮನದರಹದಾರಿಯತುಂಬಾ ಪ್ರೀತಿಯನೆರಳ ಪಡೆಯಲು ಬದುಕಿನಲ್ಲಿ ಒತ್ತರಿಸಿ ಬರುವ ದುಃಖ ವ ಹತ್ತಿಕುವಬದಲು ಒರೆಸುವ ನೊಂದ ಕಣ್ಣುಗಳನುಮರೆಯುವ ನಮ್ಮೊಡಲ ಬೇನೆಯನುನಿಸ್ವಾರ್ಥ ದ ತೊಡೆತಟ್ಟಿ ಆಖಾಡಕೆಇಳಿಯುವ “ನಾನು “ಎಂಬ ಅಹಂಗೆಲ್ಲುತ ಸಾಗುವ ಬಾಳ ಪಯಣವ ಊರು ಯಾವುದಾದರೇನು ದಾರಿಯಾವುದಾದರೇನು ನಾನು ನನ್ನೋಳಗೆ ಇರುವ ನೀವು ಒಂದೇ ಅಲ್ಲವೇನು?ನಾಲಿಗೆಯ ಬಂದೂಕು ಮಾಡಿಬದುಕಿದರೆ ಮನುಷ್ಯ ತ್ವ ಉಳಿಯುವದೇನು? ***********************

ಮನುಜ ಮತ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ನೂರ್ ಸಾಘರ್ ಹಾದಿಗಳಿಂದ ಹಾದಿಗಳು ಹಾಯಿದಷ್ಟು ಕೈಮರಗಳಿವೆ ಇಲ್ಲಿ ಸಖಿಬೀದಿಗಳಿಂದ ಬೀದಿಗೆ ಬದುಕುಗಳು ಬೆತ್ತಲಾಗಿವೆ ಇಲ್ಲಿ ಸಖಿ ಜಗದ ಒಡಲು ಮನದ ಕಡಲುತಟ್ಟದಿದ್ದರೂ ಮುಟ್ಟದಿದ್ದರೂ ಔರ್ವ ಸ್ಪರ್ಶದಲೆಗಳಿವೆ ಇಲ್ಲಿ ಸಖಿ ಒಂದೇ ಒಂದು ಮಾತಿನ ಶಬ್ದಗಳು ಬಯಲಲಿ ಬಯಲಾಯಿತುಅರಿತು ಅರಿಯದ ಮರೆತು ಮರೆಯದ ಪುರಾವೆಗಳಿವೆ ಇಲ್ಲಿ ಸಖಿ ಬಾಳು ಬಿಕ್ಕಳಿಕೆಯ ಕಥೆಗಳಿವೆ ನೂರಾರು ಅನಾಥದ್ದು ಅನಾತ್ಮದ್ದು ಇನ್ನು…ತಡೆದರೂ ತಡೆಯದ ಪಡೆದರೂ ಪಡೆಯದ ನೋವುಗಳಿವೆ ಇಲ್ಲಿ ಸಖಿ ಕದವಿಲ್ಲದ ಎದೆಯನು ಪದಗಳಿಂದ ಆವರಿಸಲಾಗದುತಬಿದ ತಬ್ಬದ ಬಾಹುಗಳನು ಕಲ್ಪಿಸಲು ಖಾಲಿ ಕನಸುಗಳಿವೆ ಇಲ್ಲಿ ಸಖಿ *************

ಗಝಲ್ Read Post »

ಕಾವ್ಯಯಾನ

ಮುನಿಸು ಸೊಗಸು

ಕವಿತೆ ರೇಖಾ ಭಟ್ ಹೋದವಾರಮೂಲೆ ಮೂಲೆ ಹುಡುಕಿಹೊಸಕಿ ಹೊರಹಾಕಿದ ಮುನಿಸುಅದಾವ ಕಿಂಡಿಯಲ್ಲಿಒಳಸೇರಿತೋಕಾಣೆಈಗ ಮತ್ತೆ ಬಲೆ ಹಬ್ಬುತಿದೆಒಬ್ಬರಿಗೊಬ್ಬರು ಕಾಣದಷ್ಟುದಟ್ಟವಾಗಿ ಎಲ್ಲೆಲ್ಲೂಬೆಳಕಿನ ಹೂಗಳೇ ಅರಳಿದಕನಸು ಕಾಣುತ್ತಕತ್ತಲೆ ಬೇರಿಗೆನೀರೆರೆಯಲು ಮರೆತಾಗಲೇನಗು ಮಾಯಮನದ ಅರಸನಂತಿದ್ದಸರಸ ಸರಿದು ಹೋಗಿ: ಕಿರೀಟವ ಮುನಿಸು ಧರಿಸಿ ನಿಂತಿದ್ದುನಾವು ಅಡಿಯಾಳಾಗಿನಮ್ಮೊಳಗೆ ಅಡಗಿಕೊಂಡಿದ್ದು ಅವನೇ ಮಾತಾಡಲಿ ಎನ್ನುವ ನಾನುನಾನೇ ಏಕೆ ಮೊದಲು ಎಂಬುವ ಆತಇನ್ನೆಷ್ಟು ಹೊತ್ತುಅಹಮ್ಮುಗಳನ್ನೇ ಹೊದ್ದು ಮಲಗುವುದು!? ಆಗಲೇಒಳಸೆಲೆಯ ಒಲುಮೆಯಿಂದಹೊಸ ಸೂತ್ರವೊಂದು ಸಿದ್ಧವಾಗಿಪರದೆ ಸರಿಯುತ್ತದೆಓಡಿಹೋದ ಅರಸ ಮತ್ತೆಸಿಂಹಾಸನ ಏರುತ್ತಾನೆನಾವು ಕಣ್ಣಲ್ಲೇ ನಗುತ್ತೇವೆ *************

ಮುನಿಸು ಸೊಗಸು Read Post »

ಕಾವ್ಯಯಾನ, ಗಝಲ್

ಹೇಳದೇ ಹೋಗದಿರು

ಗಝಲ್ ಶ್ರೀದೇವಿ ಕೆರೆಮನೆ ಅದೆಷ್ಟೊ ಶತಮಾನಗಳಿಂದ ಕಾದಿರುವೆ ಹೇಳದೇ ಹೋಗದಿರುನೀ ಬರುವ ಹಾದಿಗೆ ಕಣ್ಣು ಕೀಲಿಸಿರುವೆ ಹೇಳದೇ ಹೋಗದಿರು ಬರಿದೆ ಮತ್ತೇರದಿರು ಸುರೆಗೆಲ್ಲಿದೆ ನಿನ್ನ ಮರೆಸುವ ತಾಕತ್ತುದೇಹದ ಬಟ್ಟಲಿಗೆ ಮದಿರೆ ತುಂಬಿಸಿರುವೆ ಹೇಳದೇ ಹೋಗದಿರು ಹಗಲಿರುಳೂ ಮತ್ತೇನೂ ಇಲ್ಲ ನಿನ್ನದೇ ಧ್ಯಾನ‌ದ ಹೊರತಾಗಿತಲಬಾಗಿಲ ಮೆಟ್ಟಿಲಲಿ ಕಾದು ಕುಳಿತಿರುವೆ ಹೇಳದೇ ಹೋಗದಿರು ಜೋಡಿಮಂಚದ ಬದಿಯಲ್ಲಿ ಹಚ್ಚಿಟ್ಟ ದೀಪದ ಎಣ್ಣೆ ತೀರಿದೆದೇವರ ಗೂಡಿಂದ ಹಣತೆಯೊಂದ ತರುವೆ ಹೇಳದೇ ಹೋಗದಿರು ವಿರಹ ತುಂಬಿದ ರಾತ್ರಿ ನಿದ್ದೆಯಿರದೆ ಬಲು ದೀರ್ಘವಾಗುವುದಂತೆಜೋಗುಳ ಹಾಡಿ ಮಡಿಲೊಳಗೆ ಮಲಗಿಸುವೆ ಹೇಳದೆ ಹೋಗದಿರು ಕಾಸಿದ ತುಪ್ಪವಿದೆ ಜೊತೆಗೆ ನಾನೆ ಮಾಡಿದ ಘಮಗುಡುವ ಹೋಳಿಗೆಮಧುರಾತ್ರಿಗೂ ಮುನ್ನ ಮೃಷ್ಟಾನ್ನ ಸಿದ್ಧಪಡಿಸುವೆ ಹೇಳದೇ ಹೋಗದಿರು ಕಣ್ಣು, ಕಿವಿ ಮೂಗು ನಾಲಿಗೆಗಳೆಲ್ಲವೂ ತಮ್ಮ ಕೆಲಸ ಮರೆತಿವೆಮುತ್ತಿನಲ್ಲೆ ಅಮರಾವತಿಯ ಧರೆಗಿಳಿಸುವೆ ಹೇಳದೇ ಹೋಗದಿರು ಸಿರಿ, ನಿನ್ನ ಪಾಲಿನ ಕಟ್ಟಿಗೆಯನ್ನೆಸೆದು ಬಿಡು ಅಗ್ನಿಕುಂಡದಲಿಚಿತೆಗೇರುವ ಮುನ್ನ ಕಣ್ತುಂಬಿಕೊಳ್ಳುವೆ ಹೇಳದೇ ಹೋಗದಿರು ************

ಹೇಳದೇ ಹೋಗದಿರು Read Post »

ಕಾವ್ಯಯಾನ

ಕಾವ್ಯ ಕನ್ನಿಕೆ

ಸರಿತಾ ಮಧು ನನ್ನೊಳು ಕಾವ್ಯವೋ?ಕಾವ್ಯದೊಳಗೆ ನಾನೋ?ಅಭಿಮಾನದ ಆಲಿಂಗನವೋ?ಪದಪುಂಜಗಳ ಆರಾಧನೆಯೋ?ಶೃಂಗಾರದ ವರ್ಣನೆಯೋ?ಮನವ ಕಾಡುವ ಭಾವನೆಯೋ?ಅರಿಯದೇ ನನ್ನೊಳು ಬೆರೆತಕವಿ ಹೃದಯವೋ? ಮನದೊಳಡಗಿದ ಕಾವ್ಯಕನ್ನಿಕೆಯೋನಿನಗಾರಿದ್ದಾರು ಹೋಲಿಕೆ? ರತಿಸೌಂದರ್ಯ ಹೆಚ್ಚಿಸುವ ಲಾಲಿತ್ಯಸಹೃದಯ ಓದುಗನ ಮೆಚ್ಚಿಸುವ ಪಾಂಡಿತ್ಯಕರ್ಣಾನಂದ ನೀಡುವ ಸುಂದರ ಸಾಹಿತ್ಯನಿನಗಾರಿದ್ದಾರು ಹೋಲಿಕೆ? ಯತಿ, ಪ್ರಾಸ, ಅಲಂಕಾರಗಳನುತೊಟ್ಟಿರುವ ಆಭರಣ ಪ್ರಿಯೆನಿನಗಾರಿದ್ದಾರು ಹೋಲಿಕೆ? ಹರಿವ ಝರಿಯಂತೆ ನಿರಂತರಪ್ರವಹಿಸುವೆ ಪ್ರತಿ ಮನ್ವಂತರಕವಿ ಹೃದಯಗಳ ವಿರಾಜಿತೆನಿನಗಾರಿದ್ದಾರು ಹೋಲಿಕೆ? *********

ಕಾವ್ಯ ಕನ್ನಿಕೆ Read Post »

ಕಾವ್ಯಯಾನ

ಪತ್ರ ಬರೆಯಬೇಕಿದೆ ಮಳೆಗೆ

ಪ್ರಜ್ಞಾ ಮತ್ತಿಹಳ್ಳಿ ಯಾರಿಗೂ ಹೇಳದೇ ಊರು ಬಿಟ್ಟಿದೆ ಮಳೆಹುಡುಕಿ ಕಂಗೆಟ್ಟ ಆಷಾಢ ಭುಸುಗುಡುತಿದೆಗಾಳಿಯ ಗಂಟಲಲಿ ವಿರಹದ ಶಹನಾಯಿಹಲಿವುಳಿದ ಮೋಡಕ್ಕೆ ಬಿಕ್ಕಲಾರದ ಬಾಯಿ ಎಲ್ಲಿ ಅಡಗಿದೆಯೊ ಮಳೆರಾಯಾಮುಖಗವಸಿನ ಜಗಕೆ ಹೆದರಿದೆಯಾಕಾಡು-ಕಣಿವೆ ಹೊಲ-ತೋಟಕ್ಕೆಹಸಿರುಗವಸು ತೊಡಿಸಲಾರೆಯಾಮುಟ್ಟುವುದನ್ನೇ ಬಿಟ್ಟು ಒಳಗೋಡಿಮುಚ್ಚಿದ ಕದದ ಹಿಂದೆ ಗುಟ್ಟಾಗಿದ್ದೇವೆ ಬಾಲ್ಯದಂಗಳದ ಸಿಹಿ ಒಗರಿನ ಗೇರು ಬೇಣಗೆಲ್ಲು ಗೆಲ್ಲಿಗೂ ತೂಗುವ ಹಣ್ಣು ಹಳದಿ ಕೆಂಪುಹೋದಷ್ಟೂ ಮುಗಿಯದ ತಂಪು ಕಾಲ್ದಾರಿಮುಗಿದದ್ದು ತಿಳಿವ ಮೊದಲೇ ಕವಲೊಡೆದ ಉರಿ ಶಂಕೆಯ ರಾವಣ ಕಾವಲಿದ್ದಾನೆಅಳುವೇ ನಿಲ್ಲುವುದಿಲ್ಲ ಸೀತೆಗೆ ಕದವಿಕ್ಕಿದ ರಾಮನರಮನೆಗೆ ವೈರಾಣು ಭೀತಿಮನದ ಗೆಲ್ಲು ಗೆಲ್ಲುಗಳಲೂಕುಣಿದು ಕುಪ್ಪಳಿಸುವ ಕಪಿಸೈನ್ಯತಾವೇ ಹಚ್ಚಿಕೊಂಡ ಉರಿಯ ಹಬ್ಬದಂತೆ ಹಬ್ಬಿಸುತ್ತಿದ್ದಾವೆ ಊರಿಗೆಲ್ಲ ಎಷ್ಟು ಬೈದರೂ ಸಿಟ್ಟಿಗೇಳುವುದಿಲ್ಲಪಟದೊಳಗಿನ ದೊಡ್ಡಪ್ಪಕನಸಿನ ಕಲ್ಯಾಣಿಯೊಳಗೆ ತಣ್ಣಗಿದ್ದಾನೆಸಣ್ಣ ತುಣುಕಿನ ಚಂದ್ರಾಮಕನಸು ನೇಯಬೇಕು ಹೊರ ಬರಲಿಕ್ಕೆಪತ್ರ ಬರೆಯ ಬೇಕು ಮಳೆಗೆ ಬೀಳಲಿಕ್ಕೆ *************

ಪತ್ರ ಬರೆಯಬೇಕಿದೆ ಮಳೆಗೆ Read Post »

ಕಾವ್ಯಯಾನ

ಎದುರೇ ಪ್ರೀತಿ ಇರುವಾಗ

ನಾಗರಾಜ್ ಹರಪನಹಳ್ಳಿ -೧-ಎದುರೆ ಪ್ರೀತಿ ಇರುವಾಗಎಲ್ಲಿ ಹೊರಡಲಿಅಲೆಯಲು -೨-ಇಳೆಗೆ ಮಳೆಯ ಧ್ಯಾನನನಗೆ ಅವಳ ಹೆರಳಪರಿಮಳದ ಧ್ಯಾನ. -೩-ಅವಳ ತುಟಿಗಳು ಮಾತಾಡಿದವುಕವಿತೆ ಹುಟ್ಟಿತು -೪- ತುಟಿಗೆ ತುಟಿ ಇಟ್ಟೆಜನ್ಮ ಜನ್ಮದಬಂಧನ ನೆನಪಾಯಿತು -೫-ಅವಳು ಅಂಗೈಗೆಮುತ್ತಿಟ್ಟಳುಪ್ರೇಮದ ಉದಯವಾಯಿತು -೬-ಅವಳ ಅಂಗೈಗೆಅದ್ಭುತ ಶಕ್ತಿಅದಕೆಬೆಸುಗೆಗೆ ಬಿಸಿ -೭-ನನ್ನ ಬಲ ಅಂಗೈ ನೋಡಿಕೊಂಡಾಗಲೆಲ್ಲಾಅವಳ ಮುಖದ್ದೇ ನೆನಪುಕಾರಣಮೊದಲು‌ ಅವಳ ತುಟಿ ತಾಗಿದ್ದುಅಂಗೈಗೆ* -೮-ಆಕೆ‌ ಹೇಳುವುದುಒಂದೇಉಸಿರಾಟದ ಏರಿಳಿತಎದೆ‌ ಬಡಿತ ನೀನು‌ -೯-ಎದೆಯ ಮೇಲೆ‌ ಕೈಯಿಟ್ಟರೆಅವಳ ಹೆಸರುಕಿವಿಗೆ ಅಪ್ಪಳಿಸಿತ -೧೦-ಕುಡಿಯುತ್ತಿದ್ದೆ ಅಲೆಯುತ್ತಿದ್ದೆಅವಳ ದರ್ಶನವಾಯಿತುಎದೆಗೆ ಪ್ರೀತಿಯ ಬೀಜಹಾಕಿದಳುಅದೀಗ ಹೆಮ್ಮರವಾಗಿದೆ**********

ಎದುರೇ ಪ್ರೀತಿ ಇರುವಾಗ Read Post »

ಕಾವ್ಯಯಾನ

ಸಂಮಿಶ್ರಣ

ಡಾ.ಪ್ರತಿಭಾ ಅಬ್ಬರಿಸುವ ಕಡಲಿಗೆಯಾವತ್ತೂ ಶಾಂತವಾಗಿಹರಿಯುವ ನದಿಗಳು ಸಾಕ್ಷಿ ಖಾಲಿಯಾಯಿತೆ ಸಿಹಿನೀರಿನ ಒರತೆಹಾಕಿಕೊಂಡು ತನಗೆತಾನೇ ಪ್ರಶ್ನೆಗಳ ಸ್ವಂತಿಕೆಯ ಕಳೆದುಕೊಳ್ಳುವಅಪಾಯ ಇದ್ದರೂಒಂದು ನೆಮ್ಮದಿ ಯ ಭಾವ. ಅಬ್ಬರದ ಅಲೆಗಳುಸದ್ದು ಮಾಡಿ ಸುಮ್ಮನಾಗಲುಮೂಡಿತು ನೆಮ್ಮದಿಯಭಾವ ಶಾಶ್ವತವೇನಲ್ಕ ಈ ಬದುಕುನೋವು, ನಲಿವುಸುಖ,ದುಃಖಗಳ ಸಂಮ್ಮಿಶ್ರಣ ********

ಸಂಮಿಶ್ರಣ Read Post »

ಕಾವ್ಯಯಾನ, ಗಝಲ್

ಗಝಲ್

ಎ ಎಸ್. ಮಕಾನದಾರ ನೀನು ಹೋದ ಅರೆಗಳಿಗೆಗೆ ಬಾಗಿಲ ಕಿಟಕಿಗಳು ಬೋರಾಡಿ ಅಳುತಿವೆಇಂದಲ್ಲ ನಾಳೆ ಬರುತ್ತೀಯೆಂದು ಹೊಸ್ತಿಲ ಭರವಸೆಯಿಂದ ಕಾಯುತಿವೆ ಅಂಗಾಲಿಗೆ ಮುತ್ತಿಕ್ಕಿದ ಮಣ್ಣು ಹಿಮ್ಮಡಿಯಲಿ ಹಿಮ್ಮೇಳಹಾಕಿವೆ ಸಾಕಿದಣಿದ ದೇಹಕೆ ಖಬರಸ್ತಾನಿನ ಹೂಗಳು ಸದಾ ಸಾಂತ್ವನ ಹೇಳುತಿವೆ ಬೀದಿ ದೀಪಗಳು ಕಣ್ಣುಗಳನ್ನು ಪಿಳುಕಿಸಿ ಮಿಂಚುಹುಳು ವಾಗಿಸುತ್ತಿವೆನೆನಪುಗಳು ಮಗ್ಗುಲು ಬದಲಿಸಿ ನೇಸರನಿಗೆ ಕರೆದು ಸಾವು ತರಿಸುತಿವೆ ಹರಿದ ಅಂಗಿಗೆ ಬೆವರ ಉಣಿಸಿ ಬೆಂದ ಹಾಲಿಗೆ ನೆಮ್ಮದಿ ಬೇಡುತ್ತಿವೆತುಕ್ಕು ಹಿಡಿದ ತೊಟ್ಟಿಲಲಿ ಜೋಗುಳ ತೂಗಿ ಹರತಾಳವನು ಹೂಡುತಿವೆ ಸಾಹೇಬನ ಹಸಿವು ಕಂಡು ಹರಿದು ತಿನ್ನುವ ಹದ್ದು ಮೌನವಾಗಿಸುತ್ತಿವೆರಟ್ಟೆ ತಟ್ಟಿದ ತವೆಯಲಿ ಕರಕಲು ರೊಟ್ಟಿಗಳು ಹೊಟ್ಟಿಗೆ ಪ್ರಶ್ನಿಸುತಿವೆ *********

ಗಝಲ್ Read Post »

You cannot copy content of this page

Scroll to Top