ತೇಜಾವತಿ ಕಾವ್ಯಗುಚ್ಚ
ತೇಜಾವತಿ ಕಾವ್ಯಗುಚ್ಚ ಕಾರಣ ಕೇಳದಿರಿ ನೀವು.. ! ಸಪ್ಪೆ ಮೊಗದ ಹಿಂದಿನ ಕಾರಣ ಕೆಳದಿರಿ ನೀವುದುಃಖದ ಕಟ್ಟೆಯೊಡೆದುನೋವಿನ ಕೋಡಿಹರಿದುಕಂಬನಿಯ ಪ್ರವಾಹ ಹರಿದೀತು….! ಕ್ಷೇಮ ಕುಶಲೋಪರಿಯ ವಿಚಾರಿಸದಿರಿ ನೀವುಮುಳ್ಳುಹಾಸಿನ ಮೇಲೆ ನಡೆದುಬೆಂಕಿಯ ಕೆನ್ನಾಲಿಗೆಯಲಿ ಸಿಲುಕಿಅರೆಬೆಂದಿರುವ ಪಾದಗಳಲಿ ನೆತ್ತರು ತುಳುಕಾಡೀತು…! ಭವಿಷ್ಯದ ಗುರಿಯೇನೆಂದು ಪ್ರಶ್ನಿಸದಿರಿ ನೀವುತಮದ ಕೂಪದಲಿ ಮಿಂದುಕಣ್ಣೆದುರು ಹರಿದಾಡಿದ ನೆರಳು ಕಂಡುಮನಸು ಮತಿಭ್ರಮಣೆಗೆ ಒಳಗಾದೀತು.. ! ಕಲ್ಪನೆಯಾಚೆಗಿನ ವಾಸ್ತವವ ನೆನಪಿಸದಿರಿ ನೀವುಭರವಸೆಯ ಬೆಟ್ಟ ಕುಸಿದುನೆಮ್ಮದಿಯ ಕಣಿವೆ ಸವೆದುಕಂಡ ಕನಸುಗಳು ಕೊಚ್ಚಿ ಹೋದಾವು…! ಎಷ್ಟು ದಿನ ಅಂತ ಉಪ್ಪಿನಕಾಯಿ ಆಗಿರಲಿ ನಾನು? ಮೂಗಿಗೆ ಕಮ್ಮನೆ ಪರಿಮಳ ಬಂದೊಡನೆ ಬಾಯಲ್ಲಿ ನೀರೂರಿ ನಾಲಗೆ ಚಪ್ಪರಿಸಿ ನೆಕ್ಕುವರು…! ಉಪ್ಪಿನಕಾಯಿ ಊಟದ ರುಚಿಗಷ್ಟೇ ಹೊರತು ಊಟಕ್ಕಲ್ಲ..ಉಪ್ಪಿನಕಾಯಾಗಿ ನಾನಿಲ್ಲದಿದ್ದರೂ ಹೊಟ್ಟೆ ತುಂಬಾ ಉಣಬಹುದಲ್ಲದೆಊಟವೇ ಇಲ್ಲದಿದ್ದರೆ..?! ಉಪ್ಪಿನಕಾಯಾಗುವ ಕ್ಷಣಿಕ ಕೀರ್ತಿಗೆ ನಾನೇಕೆ ಭಾಜನವಾಗಲಿ..?ಒಪ್ಪತ್ತಿಗಾದರೂ ಊಟವಾಗಬೇಕು ನಾನುಉಂಡ ಕರುಳಿಗೆ ತೃಪ್ತಿ ನೀಡಬೇಕು ಬಹುಕಾಲದವರೆಗೆ. ರುಚಿಯೆಂದು ಅತಿಯಾಗಿ ಉಪ್ಪಿನಕಾಯನ್ನು ಸೇವಿಸಿದೆಯೋಬಿಪಿ ಏರುವುದು ಗ್ಯಾರಂಟಿ.ಜೊತೆಗೆ ಸರಣಿ ರೋಗರುಜಿನಗಳೂ ಫ್ರೀ.. ಬರಿದೇ ಊಟವಾದರೆಸ್ವಲ್ಪಮಟ್ಟಿಗಾದರೂ ಅರೋಗ್ಯ ವೃದ್ಧಿಸುವುದು ಮಿಂಚಿ ಮರೆಯಾಗುವ ಮಿಂಚುಹುಳಕ್ಕಿಂತಮಾಗಿದ ರಸಭರಿತ ಹಣ್ಣಾಗಬೇಕು ನಾನು..ನನ್ನ ಜೀವನ ಸಾರ್ಥಕವಾಗಬೇಕು ಖಗ ಮೃಗ ಹದ್ದು ಗಿಡುಗಗಳ ಕಾಟದ ಆರ್ಭಟದಲ್ಲಿಮಿಡಿಗಾಯಿ ಬಲಿಯುವುದಾದರೂ ಹೇಗೆ?ಹೌದು.. ನಾನೀಗ ಅವಿತು ಕೂರಲೇಬೇಕುಎಲೆಯ ಮರೆಯೊಳಗೆ ಅನಿವಾರ್ಯವಾಗಿ ಲೋಕಕ್ಕೆ ಕಣ್ಣಾಗಬೇಕಾದ ಹೆಣ್ಣಾಗಿರುವನಾನಂತೂ ಉಪ್ಪಿನಕಾಯಿ ಆಗಲಾರೆ ಬಿಡಿ..,ಹೂ ಹೀಚಾಗಿ ಕಾಯಾಗಿ ಬಲಿತುಮಾಗಿದ ಸತ್ವಯುತ ಹಣ್ಣಾಗಬಯಸುವೆರಸಪುರಿ ಮಾವು ನಾನು….. !
ತೇಜಾವತಿ ಕಾವ್ಯಗುಚ್ಚ Read Post »








