ಚೈತ್ರಾ ಕಾವ್ಯಗುಚ್ಛ
ಚೈತ್ರಾ ಶಿವಯೋಗಿಮಠ ಕಾವ್ಯಗುಚ್ಛ ಕೊರೋನಾ ಖೈದಿ ದಿನ ರಾತ್ರಿಗಳಿಗೆ ವ್ಯತ್ಯಾಸವೇ ಇಲ್ಲಉದಯಾಸ್ತಮಾನಗಳ ನಡುವೆಭೂಮ್ಯಾಕಾಶದ ಅಂತರ.ಗಡಿಯಾರದ ಮುಳ್ಳುಗಳುಅಪೌಷ್ಟಿಕತೆಯಿಂದ ನರಳುತ್ತಿವೆಚಲನೆ ಅದೆಷ್ಟು ಕ್ಷೀಣವೆಂದರೆಒಂದು ಹೆಜ್ಜೆ ಇಡಲೂ ಆಗದ,ಕೀಲಿಲ್ಲದ ಮುದುಕಿಯ ಹಾಗೆಕೈಲಾಗದಿದ್ದರೂ ಬೊಬ್ಬಿಡುವುದಕೇನೂಕಡಿಮೆ ಇಲ್ಲ ‘ಟಿಕ್’ ಎಂಬ ಶಬ್ದಮಾತ್ರ ಕಿವಿಯೊಳಗೆ ಕಾದ ಸೀಸಹೊಯ್ದಷ್ಟು ಕಠೋರ. ಆಗೊಮ್ಮೆ-ಈಗೊಮ್ಮೆನರ್ಸಗಳ ಅಡ್ಡಾಡುವಿಕೆ ಮಾತ್ರನಾನಿನ್ನೂ ಮನುಷ್ಯರ ನಡುವಿರುವುದಕೆಪುರಾವೆ.ಖಾನೆಯೊಳಗೆ ಖಾಲಿತನ ತುಂಬಿಉಸಿರಾಟದ ಭದ್ರತೆ ಕಾಯ್ದುಕೊಂಡು ಏಳು ದಿನಗಳನ್ನಏಳು ವರ್ಷಗಳಂತೆ ಕಳೆದು ಬರುವ ಖೈದಿ! ಕಣ್ಣಾಮುಚ್ಚಾಲೆ ತಪ್ಪಿಸಿಕೊಳ್ಳುವುದಕ್ಕೆ ಹೇಳುತ್ತಿದ್ದ ಕುಂಟುನೆಪಗಳಿಂದು ಬಂಧಿಸುವುದಕ್ಕೆಬರುವ ಭಟನಂತೆ.ಜ್ವರವೆಂದು ನರಳುವ ಹಾಗಿಲ್ಲರಾಕ್ಷಸನಂತೆ ಹಗಲಿರುಳೆನ್ನದೆ ದುಡಿದುಒಂದೆರಡು ದಿನವೂ ಮೈಕೈ ನೋವೆಂದುಒದ್ದಾಡುವ ಹಾಗಿಲ್ಲ. ಎಲ್ಲ ರಸ್ತೆಗಳೂಅಲ್ಲಿಗೆ ಎಳೆದುಕೊಂಡು ಹೋಗುತ್ತಿವೆ.ಕಾಲು ಕಿತ್ತು ರಸ್ತೆ ಬದಲಿಸಿದರೂ ಅವುಒಯ್ಯುವುದು ಅಲ್ಲಿಗೇ!ಎಲ್ಲಿಯೂ ಹೋಗದೆ ಒಳಗಿರಲುನನ್ನ ದಾಸ್ತಾನು ಅಕ್ಷಯಪಾತ್ರೆಯೇ?ದುಡಿದು ತುತ್ತಿನ ಚೀಲ ತುಂಬಿಸಿಯೇನೆಂದರೆಎಲ್ಲಿಂದಲೋ ಹಾರಿ ಬಂದು ಕತ್ತುಹಿಸುಕುವ ಅಣುರಕ್ಕಸ. ಎಷ್ಟು ದಿನಈ ಕಣ್ಣಾಮುಚ್ಚಾಲೆಯೋ ? ಕಾಲ ಮುಟ್ಟಿದರೆ, ಮುತ್ತಿಟ್ಟರೆ ಹೆಚ್ಚುತ್ತಿದ್ದಿದ್ದುಪ್ರೀತಿ ಒಲವುಗಳು ಮಾತ್ರ.ಸುರಿವ ಕಣ್ಣೀರಿಗೆ ಅಣೆಕಟ್ಟಾಗಿದ್ದುನೇವರಿಕೆ, ತೆಕ್ಕೆಯ ಮೃದು ಅಪ್ಪುಗೆಕಳೇಬರಕ್ಕೆ ಕೊನೆ ಪೂಜೆಯೇಕಳೆಯಂತೆ, ಕೊನೆಯದಾಗಿ ತಬ್ಬಿಬಿದ್ದು ಹೊರಳಾಡಿ ಅತ್ತರೂ ತೃಪ್ತಿನೀಡುತ್ತಿರಲಿಲ್ಲ ಬೀಳ್ಕೊಡುಗೆ.ತಂದೆ- ತಾಯಿ ಮಕ್ಕಳೆಲ್ಲ ಒಂದೆಡೆಸೇರಿ ಸಂಭ್ರಮಿಸುತ್ತಿದ್ದಿದ್ದು ಹಬ್ಬಗಳುಒಬ್ಬರಿಗೊಬ್ಬರಾದಾಗ ಹರಡುತ್ತಿದ್ದಿದ್ದುಭ್ರಾತೃತ್ವ, ಒಂದೆಂಬ ಭಾವಎಲ್ಲಿಯೋ ಏನೋ ಅವಘಡವಾದರೆಮರುಗುತ್ತಿದ್ದಿದ್ದು ಮೃದು ಮನ. ಎಲ್ಲವೂ ಗತ ವೈಭವವೀಗಮುಟ್ಟುವ ಹಾಗಿಲ್ಲ ತಟ್ಟುವ ಹಾಗಿಲ್ಲನೇವರಿಸಿ ಸಂತೈಸಿದರೆ ಹರಡುವುದುಖಾಯಿಲೆ ಮಾತ್ರ!ಸಂಸ್ಕಾರ ಕಾಣದ ಶವಗಳ ಕನಿಷ್ಠಒಮ್ಮೆ ಕಂಡರೂ ಸೌಭಾಗ್ಯತಂದೆ ತಾಯಿ ಮಕ್ಕಳು ದಿಕ್ಕಿಗೊಬ್ಬರಂತೆಒಬ್ಬರಿಗೊಬ್ಬರಾದರೆ ಹರಡುವುದುಪಿಡುಗಂತೆದಿನವೂ ಒಂದೇ ರುಚಿ ನಾಲಿಗೆಯದುಡ್ಡು ಬೀಳಿಸಿದಂತೆ, ಎಂತಹ ಅನಾಹುತಕ್ಕೂಮನಗಳು ಈಗ ಮರಗಟ್ಟಿ ಹೋಗಿವೆ *************************









