ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಗಝಲ್ ವೆಂಕಟೇಶ ಚಾಗಿ ಆಕಾಶವನು ಮುಟ್ಟುವೆನು ಒಂದು ದಿನ ಚಿಂತಿಸದಿರು ಅಪ್ಪ ನೆಲದ ಮೇಲಿನ ಡೊಂಬರಾಟದ ಬದುಕಿಗೆ ಚಿಂತಿಸದಿರು ಅಪ್ಪ || ನಿನ್ನ ಬಲವನೆಲ್ಲ ಸೇರಿಸಿ ಆಕಾಶಕ್ಕೊಮ್ಮೆ ಚಿಮ್ಮಿ ಬಿಡು ನಿನ್ನ ನನಸುಗಳ ಹೊತ್ತು ತರುವೆ ನೋಡುತಿರು ಅಪ್ಪ || ಹಸಿವಿನ ಆಟವನು ನೋಡಲು ನೆರೆಯುವರು ನಾಟಕದ ಮಂದಿ ನಿನ್ನಾಟದ ಗತ್ತು ಗಮ್ಮತ್ತುಗಳ ತೋರಿಸುವುದ ಮರೆಯದಿರು ಅಪ್ಪ || ಚಂದ್ರಮನ ತೋರಿಸಿ ಅಮ್ಮ ತುತ್ತು ಉಣಿಸುವಳು ಅಷ್ಟೇ ತುತ್ತುಗಳ ಕೂಡಿಡಲು ನನ್ನ ಎಂದಿಗೂ ಕಡೆಗಣಿಸದಿರು ಅಪ್ಪ || ಕಟ್ಟಿಗೆಯು ತುಂಬಾ ಗಟ್ಟಿಯಾಗಿದೆ ಗೊತ್ತೆ ನನ್ನ ನಂಬಿಕೆಯಂತೆ ‘ಚಾಗಿ’ಯ ಕವನಗಳಂತೆ ಬಡತನವ ಎಂದು ಮರೆಯದಿರು ಅಪ್ಪ || *************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಪ್ರತಿಮಾ ಕೋಮಾರ ಕಹಿಯೂರಲ್ಲೊಂದು ಸಿಹಿ ಗಿಡವ ನೆಡುವ ಸಹಕರಿಸು ಬಂದು ನೆಟ್ಟ ಗಿಡಕೆ ಜೀವ ಜಲ ಕೊಟ್ಟು ಪೊರೆಯುವ ಸಹಕರಿ‌‌ಸು ಬಂದು ಬಾಗಿ ಬಸವಳಿದು ಉರುಳಿದ ಜೀವಕೆ ಸಾಂತ್ವನವೇ ಮದ್ದು ಮಾನವತೆಯ ನೆಲೆಯಲ್ಲಿ ಮಮತೆಯನು ಹನಿಸುವ ಸಹಕರಿಸು ಬಂದು ಕೋಟೆಗಳ  ಕಟ್ಟಿ ಹಕ್ಕಿಯೆಂದಾದರೂ ತನ್ನ ಬಂಧಿಸಿಕೊಂಡೀತೇ? ಮನಗಳ ನಡುವೆ ಹಬ್ಬಿರುವ ಬೇಲಿಯನು ಕಡಿಯುವ ಸಹಕರಿಸು ಬಂದು ಸ್ವಾಥ೯ದ ಮಾರುಕಟ್ಟೆಯಲ್ಲಿ ಬಿಕರಿಯಾಗುವವು ಬರೀ ಸ್ವಾಥ೯ಗಳೇ ನಿಸ್ವಾಥ೯ತೆಯ ದೀಪ ಹಚ್ಚಿ ಬದುಕ ಬೆಳಗುವ ಸಹಕರಿಸು ಬಂದು ಗಂಧಕ್ಕೆ ಮುಚ್ಚಿ,ಬಿಚ್ಚಿ,ಬೊಬ್ಬೆ ಹೊಡೆವ ಅವಶ್ಯಕತೆಯೇ ಇಲ್ಲ ಒಳ್ಳೆಯತನದಿ ಒಮ್ಮೆ ಕುಸಿದ “ಪ್ರತಿ” ಹೃದಯ ತಟ್ಟಿ ಬರುವ ಸಹಕರಿಸು ಬಂದು ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪ್ರಿಯ ಸಖ H. ಶೌಕತ್ ಆಲಿ  ಬೆಳದಿಂಗಳಲ್ಲಿ ತಂಪು ತಂಗಾಳಿಯಲ್ಲಿ ನಮ್ಮ ಮಿಲನ ಆಲಿಂಗನ ಅರಳಿದ ನೈದಿಲೆಯ ಚಂದಿರನ ಚುಂಬನ ಪ್ರಶಾಂತವಾದ ಹೃದಯ ಮನಸೆಲ್ಲಾ ಅವನಲ್ಲೇ ಲೀನಾ ಆಧ್ಯಾತ್ಮವೂ ಅಮರ ಪ್ರೇಮವೂ ಬುದ್ಧ ನನ್ನ ಪ್ರಿಯ ಸಖ ಬೆಳಕಾಗಬೇಕು ಈ ಭೂಮಿಯು ಈ ಸುಂದರ ಪ್ರಕೃತಿ ನೆನಪಿರಲಿ ಶ್ವೇತ ಮೋಡಗಳು ಆಗಸದಲ್ಲಿ ಹೃನ್ಮನಗಳು ಏಕಾಂತವಾಗಿ ಭಾವನೆಗಳು ಹೂವಂತೆ ಅರಳಿ ಸುಖದ ಸೆಲೆಯಾಗಿ ಅವ ನಿಂತ ಬುದ್ಧ ನನ್ನ ಪ್ರಿಯ ಸಖ ನೋಟದಲ್ಲಿ ಸಾವಿರ ಅರ್ಥ ಜನ್ಮಜನ್ಮಾಂತರ ಪುನೀತ ಕಣ್ಣ ರೆಪ್ಪೆಗಳು ಮಿಟುಕಾಡಲಿಲ್ಲ ಜಗದ ಉದ್ದಾರಕ ನಾಯಕ ಶುಭವನ್ನೆ ಲೇಸೆಂದು ಬಯಸುವ ಬೆಳದಿಂಗಳ ಭಾಸ್ಕರ ಚಂದಿರ ನಾ ಬೆರೆತು ಹೋದೆ ಬೆಳಕಲಿ ನಕ್ಷತ್ರಗಳು ಆಗಸದಲ್ಲಿ ಆಗೋ ಬಂದ ನನ್ನ ಸನಿಹಕ್ಕೆ ಮಿತ್ರ ಬುದ್ಧನನ್ನ ಪ್ರಿಯಸಖಿ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪೂರ್ಣವಾಗದ ಸಾಲುಗಳು ಶೀಲಾ ಭಂಡಾರ್ಕರ್ ಮನಸ್ಸು ಒಮ್ಮೊಮ್ಮೆತೊಟ್ಟಿಕ್ಕುತ್ತಾ ಶಬ್ದಗಳಾಗಿ, ಹಾಳೆಯ ಮೇಲೆ ಒಂದೊಂದಾಗಿ ಬಿದ್ದು ಹರಡಿಕೊಳ್ಳುತ್ತಾ…. ಶುರುವಿಟ್ಟುಕೊಳ್ಳುತ್ತದೆ ಆಡಲು ಶಬ್ದಗಳ ಆಟ. ಹೊಂದಿಕೊಳ್ಳಲು ಹೆಣಗುವ ಭಾವನೆಗಳ ಮಾಟ. ಕವಿತೆಯಾಗಲು ಹೊರಟ ನಿಶ್ಶಬ್ದ ಶಬ್ದಗಳ ಅರ್ಧಂಬರ್ಧ ಸಾಲುಗಳು. ನೋಡಲು ಯಾವುದೋ ನಿರ್ಭಾವುಕ ಚಹರೆಯಂತಹ ಉಲ್ಲೇಖಗಳು. ಹಿಂದೊಮ್ಮೆ ಮುಂದೊಮ್ಮೆ ನಿಲ್ಲಲು ಸೆಣಸಾಟ. ಅರ್ಥವಿಲ್ಲದವುಗಳ ಮೂಲೆಗೆ ತಳ್ಳಾಟ ಮನುಷ್ಯರಲ್ಲಿ ಮಾತ್ರವಲ್ಲ ಶಬ್ದಗಳಿಗೂ ಸಂಬಂಧಗಳಲ್ಲಿ ಹೊಂದಾಣಿಕೆ ಬೇಕು ಎಂದರೆ ಒಪ್ಪುವಿರಾ? *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಿಯಮ ಡಾ.ಅಜಿತ್ ಹರೀಶಿ . ಅಪಘಾತಗಳೆಲ್ಲ ಆಕಸ್ಮಿಕಗಳಲ್ಲ ಕಾರಣವಿರಬಹುದಲ್ಲ ಅಲಕ್ಷ್ಯ ಆತುರ ಅತ್ಯುತ್ಸಾಹ ಕಲ್ಪಿಸುವ ಎದುರಿನ ಅಚಾತುರ್ಯ ಬೇಕೆಂದಾಗ ಬಂಜೆತನ ಬೇಡವಾದಾಗ ಫಲಿಸುವ ಗರ್ಭ ಸುರತಕ್ಕೆ ಸುರಕ್ಷಿತ ಸಂಗಾತಿ ಮಾತ್ರ! ಯುಗ ಬದಲಾಗಿದೆ ಸ್ವರ್ಗ ನರಕಗಳೆಲ್ಲವೂ ಸೃಷ್ಟಿಯಾಗಿದೆ ಇಲ್ಲೇ ತೆರೆಯಲಾಗಿದೆ ಬದುಕಿನ ಕಂದಾಯ ಕಟ್ಟುವ ಕೌಂಟರ್ ನಮ್ಮಲ್ಲೇ ದೇವನ ಕಣ್ಣುಗಳು ಮಾರು-ಮಾರಿಗೆ ಎಲ್ಲೆಲ್ಲೂ ಟವರ್ ಲೊಕೇಷನ್ ಅಪರಾಧಿಯಾಗದ ಸೂತ್ರ ಜೀವಿಸುವ ಸಾಫ್ ಸೀದಾ *********

ಕಾವ್ಯಯಾನ Read Post »

ಕಾವ್ಯಯಾನ

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ

ಬೆಳಕಿನ ಸಂತ ಶಿವಶಂಕರ ಸೀಗೆಹಟ್ಟಿ. ಊರೂರು ಸುತ್ತಿದ ಬಿಕ್ಕುಪಾತ್ರೆ ನನ್ನ ಮುಂದೆಯೇ ಬಂದು ನಿಂತಿದೆ ಪಾತ್ರೆಗೆ ಬೀಳುವ ಎಲ್ಲವೂ ನನ್ನೊಳಗೆ ಅಕ್ಷಯವಾಗುತ್ತಿವೆ ಅಚ್ಚರಿಯೆನಿಸಿತು ನಾನು ಕತ್ತಲನು ಸುರಿದಾಗ ಬೆಳದಿಂಗಳು ನನ್ನ ಕಣ್ಣೆದುರಿಗಿತ್ತು ಊರೂರು ತಿರುಗಿದ ಬೆಳಕು ಮನವೆಂಬ ಗುಡಿಸಲಿಗೂ ಬಂದು ಬೆಳಕು ಕೊಟ್ಟಿದೆ ಬೆಳಕು ಪಡೆಯುವ ತವಕದ ಬಯಕೆಯಲ್ಲಿ ಗಾಳಿ ತಾಗಬಹುದೆಂದು ಬದುಕ ಅಡ್ಡಗಟ್ಟಿದ್ದೇನೆ ಹೆಗಲ ಜೋಳಿಗೆಯಲ್ಲಿ ಬಯಲೆಂಬ ಸಿರಿಯು ಬದುಕುಗಟ್ಟಿದೆ ಬಾಚಿ ತಬ್ಬುವ ತವಕದಲ್ಲಿ ಬೆನ್ನ ಹಿಂದೆಯೇ ಸಾವರಿಸಿ ನಡೆಯುತಿದ್ದೇನೆ ಆಸೆ ಅತಿಯಾಗಬಾರದೆಂಬ ಬುದ್ದಗುರುವಿನ ಮಾತುಗಳನು ನೆನೆದು ಅರಿವಿನ ಮರದ ಬಳಿ ದಾರಿ ಕಾಯುತ್ತಿದ್ದೇನೆ. ಮನದ ಕೊಳೆ ತೊಳೆದ ಅರಿವಿನ ಸಂತನಿಗೆ ಕಾರುಣ್ಯದ ಬತ್ತಿಯನು ಜೀವರಸವೆಂಬ ನೂಲಿನಲದ್ದಿ ಬೆಳಕೆಂಬ ಬೆಳಕಿಗೆ ಪೂಜಿತನಾಗಿದ್ದೇನೆ ಆತನೊ ಜಂಗಮಕೆ ನಡೆನಡೆದು ಜಗದ ಗುರುವೆನಿಸಿದನು ನಾನು ಬಯಲಲ್ಲಿ ಮೈತ್ರಿಯನಂಚಿ ಆನಂದಿತನಾದೆನು. ******

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ Read Post »

ಕಾವ್ಯಯಾನ

ಬುದ್ಧ ಪೂರ್ಣಿಮೆಯ ವಿಶೇಷ -ಕವಿತೆ

ವೈಶಾಖ ಹುಣ್ಣಿಮೆ ರಾತ್ರಿ ಶಾಲಿನಿ ಆರ್. ಮನುಕುಲದ ಭಾಗ್ಯ ನಮ್ಮ ಸರ್ವಾಥ ಸಿದ್ಧ/ ಲೋಕದ ಜನರ ದುಃಖ ನಿವಾರಿಸಲರಿತು ಎದ್ದ// ವೈಶಾಖ ಹುಣ್ಣಿಮೆಯ ರಾತ್ರಿ ಹಳೆನೆನಪುಗಳ ಕಳಚಿತು/ ದಿವ್ಯಚಕ್ಷುವಿನಿಂದಾದ ಯೋಗ ಜ್ಞಾನಜ್ಯೋತಿ ಬೆಳಗಿತು// ದೇದೀಪ್ಯಮಾನ ಬೆಳಗದು ಮನುಕುಲದ ತಮವ ಕಳಚಿತು/ ಧ್ಯಾನದೊಳಿದ್ದರು ಎಚ್ಚರವಾಗಿರುವ ಮನದ ನೇತ್ರ ಅರಳಿತು// ಬಿಂದುವೊಂದು ಸಿಂಧುವಾದ ಆನಂದದಾ ಮೊಗ/ ಅನಿರ್ವಚನೀಯ ಕಲ್ಮಷರಹಿತ ಪರಮಾನಂದದಾ ಯೋಗ// ಮಾನವ ಕುಲ ಒಂದು ಆಸೆಯೇ ದುಃಖಕ್ಕೆ ಕಾರಣ ಎಂದ/ ಸಮ್ಯಕ್ ಬೋಧಿ’ ಸಿದ ಅಷ್ಟಾಂಗ ಮಾರ್ಗ ಅರುಹಿದ// ಬಹುಜನ ಹಿತಾಯ ಬಹುಜನ ಸುಖಾಯ ಬೋಧಿಸಿದ / ಮರಣ ಜನನದ ಅನಿವಾರ್ಯವೆಂದು ನಿರ್ವಣದ ದಾರಿ ತೋರಿಸಿದ// ಜಗದ ಅಮರಜ್ಯೋತಿಯಾಗಿ ಅಮೃತಧಾರೆ ಹರಿಸಿದ/ ಧನ್ಯನಾದ ಗುರು ನಮ್ಮ ಸರ್ವಾಥಸಿದ್ಧ ಬುದ್ಧನಾದ// ******

ಬುದ್ಧ ಪೂರ್ಣಿಮೆಯ ವಿಶೇಷ -ಕವಿತೆ Read Post »

ಕಾವ್ಯಯಾನ

ಬುದ್ಧ ಪೂರ್ಣಿಮೆ ವಿಶೇಷ-ಕವಿತೆ

ಬೆಳಕಿಗೊಂದು ಮುನ್ನುಡಿ ಅರಸುತ. ಪೂರ್ಣಿಮಾ ಸುರೇಶ್ ವಿಶ್ವವೆಲ್ಲವನು ಕಪ್ಪು ಕವಿದಾವರಿಸಿದ ವೇಳೆ ಸೃಷ್ಟಿಯಖಿಲದ ಜೀವಜಾತಗಳಿಗೆಲ್ಲ. ನಿದ್ರೆಯ ಮಾಯೆ ಮುಸುಕಿರುವ ವೇಳೆ ಸೊಬಗಿನೈಸಿರಿಯೆ ಸಾಕಾರಗೊಂಡಂತೆ ಪಕ್ಕದಲಿ ಪವಡಿಸಿದ ಸುಕೋಮಲೆಯ. ಘನವಾದ ಕಟ್ಟಕ್ಕರೆಯ ಚೆಂಬೆಳಕ ಲೆಕ್ಕಿಸದೆ ಹೊರಟೇಬಿಟ್ಟ ಪುಣ್ಯಾತ್ಮ. ಹೊಸ ಬೆಳಕಿನ ಮೂರ್ತತೆಯ ಹುಡುಕಾಟದಲ್ಲಿ ಬದುಕಿನರ್ಥವ ಬಗೆವ ಬೆದಕು ನೋಟದಲ್ಲಿ ನನ್ನೊಳಗೂ ಆಗಾಗ್ಗೆ ತುಂಬಿಕೊಳ್ಳುವ. ಕಪ್ಪಿಗೆ ಕಪ್ಪ ಸಲ್ಲಿಸುತ್ತಲೇ ಬಂದಿರುವೆ. ಆದರೀಗ ಕಪ್ಪಿನೆದೆಯನ್ನಿರಿದು ಆಚೆ ಹೆಜ್ಜೆ ಹಾಕಿರುವೆ. ಅವ್ಯಕ್ತದೆಡೆಗೆ ಅವನಂತೆ ಒಬ್ಬಂಟಿ- ಕೆಮ್ಮಣ್ಣ ಮಾದಕ ಕಂಪನ್ನು ಮೂಸಿ ಮುಟ್ಟಿರುವೆನವನ ಸಂಪ್ರೀತಿ ದಡವ ಅವನ ಕಣ್ಣುಗಳ ಒಳಪುಟಗಳಲ್ಲಿ ಅಚ್ಚಾದ ನಲ್ಗವಿತೆಯನ್ನು ಕದ್ದು ನನ್ನೆದೆಯ ತಂತಿಯಿಂದದನು ಶ್ರುತಿಗೊಳಿಸಿ ದನಿ ನೀಡಿ ನಯವಾಗಿ ಹರ್ಷಿಸಿರುವೆ ತುಂತುರು ತುಂತುರಾಗಿ ಜಿನುಗುವ ನಾದದ ಬೆಳಕನ್ನು ಬೊಗಸೆಯಲ್ಲಿ ಹಿಡಿದಿಡುವ ಸಾಹಸದ ಆಟ ನನಗೆ; ಹಂಬಲದ ಅರಗಿಣಿಯ ರಮಣೀಯ ರೆಕ್ಕೆಗಳ ವಿವಿಧ ವರ್ಣಗಳ ಚೆಂದನೆಯ ಗರಿಗಳಿಂದ ಅಲಂಕರಿಸಿ, ಸೊಬಗ ಸವಿಯುತ ನನ್ನ ಮೈಯನು ಮರೆತು ಮಹದಾನಂದಕ್ಕೆ ಚೊಕ್ಕ ಮುನ್ನುಡಿ ಬರೆವಾಸೆ ನನಗೆ. ಕೊನೆಗೆ, ನಟ್ಟಿರುಳಿನಲ್ಲಿ ಏಕಾಏಕಿ ಅರಮನೆ ತೊರೆದವನ. ಶಾಂತ ವದನದ ಕಾಂತಿಯುಕ್ತ ತೇಜಸ್ಸಿನಲಿ ಮಿಂದೆದ್ದು, ಶುಚಿಗೊಳುವ. ಅದಮ್ಯ ಸಾರ್ಥಕ್ಯದಾಸೆ ನನಗೆ. *********

ಬುದ್ಧ ಪೂರ್ಣಿಮೆ ವಿಶೇಷ-ಕವಿತೆ Read Post »

ಕಾವ್ಯಯಾನ

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ

ಬುದ್ದಂ ಶರಣಂ! ಚೈತ್ರಾ ಶಿವಯೋಗಿಮಠ ನಿನ್ನಲ್ಲಿ ನನ್ನಲ್ಲಿ ಎಲ್ಲೆಲ್ಲಿಯೂ ದೇವರ ಕಂಡೆ ಅಂತಹದರಲ್ಲಿ ನನ್ನನೇ ನೀನು ದೇವರ ಮಾಡಿಕೊಂಡೆ ದೀಪವ ಮುಡಿಸಿ, ಧೂಪವ ಹಾಕಿದೆ ಮೂರ್ತಿ ಮಾಡಿ ಒಳಗಿನ ದೀಪವ ಬೆಳಗಲಾರೆಯ ಮನದ ಸೊಡರಿಗೆ ಕಿಡಿ ನೀಡಿ? ಅನ್ನವ ಬೇಯಿಸಿ, ಹಿಸುಕಿ ಪರೀಕ್ಷಿಸಿ ಬೆಂದನ್ನವ ಸಮರ್ಪಿಸಿದೆ ಎಡೆಯೆಂದು ಮನದ ಗಡಿಗೆಯಲಿ ಭಾವದನ್ನವ ಬೇಯಿಸಲಾರೆಯ ನೀನಿಂದು? ನಾನು ದೇವರಲ್ಲ, ನಿನ್ನೊಳಗಿನ ಪ್ರಾಂಜಲ ದೈವತ್ವ! ದೇವರಾಗಿಸದೆ, ಮರೆಯದೆ ಮೆರೆಸಿದರೆ ಸಾಕು ಮನುಷ್ಯತ್ವ! ಇನ್ನಾದರೂ ನಿನ್ನೊಳಗಿರುವ ನನ್ನ ಕೂಗನ್ನ ಕೇಳು ಮಲಗಿದ್ದು ಸಾಕು ಬಿಡು.ನಡಿ ಬೆಳದಿಂಗಳ ದಾರಿ ಹಿಡಿ ,ಏಳು. ********

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ Read Post »

ಕಾವ್ಯಯಾನ

ಕಾವ್ಯಯಾನ

ಎರಡು ಲಾಕ್ ಡೌನ್ ಕವಿತೆಗಳು ಶ್ರೀದೇವಿ ಕೆರೆಮನೆ ಮಾತು ಮುಗಿದ ಹೊತ್ತಲ್ಲಿ ನೀನು ಸಂಪರ್ಕಗಳೆಲ್ಲವನ್ನೂ ನಿಲ್ಲಿಸಿ ಅಂತರ ಕಾಯ್ದುಕೊಳ್ಳ ತೊಡಗಿದ ಮೇಲೆ ನಾನು ಫೋನು ಕೈಗೆತ್ತಿಕೊಂಡೆ ಅತ್ತಕಡೆಯ ನೀರಸ ಮಾತುಗಳ ಹೊರತಾಗಿಯೂ ಒಂದಿಷ್ಟು ಜೀವ ತುಂಬಲು ಯಾವುದೋ ಹಳೆ ನೆನಪುಗಳ ಹೆಕ್ಕಿ ಪೋಣಿಸುತ್ತ ಮಾಲೆ ಮಾಡಿದರೂ ಕಾಣದ ಉತ್ಸಾಹ ನಿನ್ನ ಮಾತಿನಲ್ಲಿ ಅರ್ಥವಿಲ್ಲದ ನೀರಸ ಮಾತುಗಳ ಆಡುವುದಾದರೂ ಅದೆಷ್ಟು ಸಮಯ ? ಹತ್ತೇ ನಿಮಿಷಗಳಲ್ಲಿ ಮಾತು ಸೋತು ಅಲ್ಲಿಯೂ ಅಂತರ ಇಣುಕಿ ವ್ಯರ್ಥ ಪ್ರಲಾಪವೆನಿಸಿದಾಗ ಮತ್ತದೇ ಅಂತರ ಮಾತ್ತೆಲ್ಲವೂ ಮುಗಿದು ಎರಡೂ ಬದಿಯಿಂದ ಬರಿದೇ ಮತ್ತೆ ಎಂಬ ಶಬ್ಧ ಪುನರಾವರ್ತನೆಯಾಗುವ ವಿಕ್ಷಿಪ್ತ ಹೊತ್ತಲ್ಲಿ ನಾನು ನಿಟ್ಟುಸಿರಿಡುತ್ತ ಮಾತು ಮುಗಿಸುವ ಮಾತನಾಡುವಾಗಲೇ ಅತ್ತ ಕಡೆಯಿಂದ ತೇಲಿ ಬರುತ್ತದೆ ‘ಈ ದಿಗ್ಬಂಧನವೆಲ್ಲ ಮುಗಿದು ಸಿಗುವುದಾದರೂ ಯಾವಾಗ ನೀನು ಒಮ್ಮೆ ನನ್ನತೋಳಿಗೆ ? ಅದೆಷ್ಟು ತಿಂಗಳು ಕಾಯಬೇಕು ನಾನು , ನಿನ್ನದೊಂದು ಮೈಮರೆಸುವ ಅಪ್ಪುಗೆಗೆ ನಶೆಯೇರಿಸುವ ಮುತ್ತಿಗೆ?’ ಮುಗಿಯುತ್ತ ಬಂದ ಮಾತುಗಳಲ್ಲೀಗ ತುಳುಕುತಿದೆ ಹೊಸ ಹರೆಯ ದೂರದಲ್ಲೆಲ್ಲೋ ಕೂಗುವ ಕೋಗಿಲೆ ಅನುರಣಿಸಿ ಇಬ್ಬರ ಫೋನಿನಲ್ಲೂ ಜೊತೆಗಿರುವ ಭರವಸೆ ತುಂಬುತಿದೆ ———– ದಿಗ್ಭಂದನ ಮುಗಿಯುವಾಗ ನಾಗಾಲೋಟದಿಂದ ಓಡುತ್ತಿದ್ದ ದಿನಗಳೀಗ ಬಸವನಹುಳದಂತೆ ತೆವಳುತಿದೆ ನಿಮಿಷಗಳೆಲ್ಲ ಗಂಟೆಗಳಾಗಿ ಸೆಕೆಂಡುಗಳೂ ಇನ್ನೇನು ಗಂಟೆಗಳಾಗುವ ಈ ದುರಂಧರ ಸಮಯದಲ್ಲಿ ಇಬ್ಬರ ಮುಖದಲ್ಲೂ ಪ್ರತಿಫಲಿಸುವ ಪೇಲವ ನಗೆಗೆ ಅಂತರ ಮುರಿಯುವ ಶಕ್ತಿಯಿಲ್ಲ ದೇಶ ದೇಶಗಳಾದಿಯಾಗಿ ರಾಜ್ಯ, ಜಿಲ್ಲೆ ತಾಲೂಕು ಗ್ರಾಮಗಳ ಮಾತು ಬಿಡಿ ಶಹರ, ಹಳ್ಳಿಗಳ ಒಂದೊಂದು ಗಲ್ಲಿ, ಓಣಿಯೂ ದಿಗ್ಬಂಧನ ಹಾಕಿಸಿಕೊಂಡು ಜೈಲಿನಲ್ಲಿರುವ ಏಕಾಂಗಿ ಕೈದಿಯಂತಾಗಿ ವಿಲವಿಲನೆ ಒದ್ದಾಡುತ್ತಿರುವಾಗ ನಮ್ಮದೇನು ಹೆಚ್ಚುಗಾರಿಕೆಯಿಲ್ಲ ಬಿಡು ಅತ್ತ ತಿರುಗಿದರೂ ಕಿರುಗುಡುವ ಜೋಡಿಮಂಚ ಇತ್ತ ತಿರುಗಿದರೂ ಸದ್ದು ಮಾಡುವುದನು ಕೇಳಿಯೂ ಒಂದೊಂದು ತುದಿಗೆ ಒಬ್ಬೊಬ್ಬರು ನಿಟ್ಟುಸಿರಿಡುತ್ತಲೇ ಅಂತರ ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಅರಿವಿದೆ ನಮ್ಮಿಬ್ಬರಿಗೂ ಮುಂಜಾನೆ ಬೇಗನೆದ್ದು ಚಹಾಕ್ಕೆ ನೀರಿಡುವ ಮೊದಲೇ ಗೀಜರ್’ನ ಬಟನ್ ಒತ್ತಿ ಎಲ್ಲಕ್ಕಿಂತ ಮೊದಲು ಆಗಿಬಿಡಲಿ ಸ್ನಾನವೇ ಎಂದು ಗೊಣಗಿ ತಲೆಗೆರೆದುಕೊಂಡು, ಹಣೆಗೆ ಬಿಂದಿ ಇಡಲು ಕನ್ನಡಿ ಎದುರು ನಿಂತಾಗಲೇ ಕಾಣುತ್ತದೆ ಅಂತರ ಮುಗಿದ ಸೂಚನೆಗೆ ಇನ್ನೂ ಹಾಸಿಗೆ ಬಿಟ್ಟೇಳದ ನಿನ್ನ ಮುಖದಲ್ಲಿ ಅರಳುವ ಮುಗುಳ್ನಗೆ **********

ಕಾವ್ಯಯಾನ Read Post »

You cannot copy content of this page

Scroll to Top