ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಅಡುಗೆ ಮನೆಯೆಂದರೆ ಸ್ಮಿತಾ ರಾಘವೇಂದ್ರ ಅಡುಗೆ ಮನೆಯೆಂದರೆ ಯುದ್ಧಕ್ಕೆ ಮೊದಲು ಎಲ್ಲವೂ ಶಾಂತವೇ ಯುದ್ದ ಮುಗಿದ ಮೆಲೂ… ಅನಿವಾರ್ಯ ಮತ್ತು ಅವಶ್ಯಕತೆ- ಸಂಭವಿಸುವ ಮುಂಚಿನ ಸಮಜಾಯಿಶಿ. ಅಣಿಗೊಳ್ಳಲು ಹೆಚ್ಚಿನ ತಯಾರಿ ಏನಿಲ್ಲ ಅತ್ತಿಂದಿತ್ತ ತಿರುಗಾಡುತ್ತಲೇ ಮಾತು ಒಗೆದಂತೆ- -ಅಣಿಮಾಡುವ ರಣರಂಗ. ನುಗ್ಗೆಕಾಯಿ ಸಪೂರ ದಂತವರು, ಹೊಟ್ಟೆ ಭಾರದ ದೊಣ್ಣ ಮೆಣಸಿನಂತವರು ಕೆಂಪು ಗಲ್ಲದ ಟೊಮೆಟೊ ಅಂತವರು, ಸೊಪ್ಪಿನಂತೆ ಉದ್ದ ಕೂದಲಿನವರು, ನಾ ನಾ ವಿಧದ ಸೈನಿಕರ ಗುಂಪು, ರಾಜನ ಆಗಮನವನ್ನೇ ಎದುರು ನೋಡುತ್ತ.. ಯಾರು ಮೊದಲು ಮಡಿಯಬಹುದು!? ಇಂದು ನಿನ್ನದೇ ಪಾಳಿ ಮೂಲೆಯಲ್ಲಿ ಕೂತ ಈರುಳ್ಳಿ. ಬಿಡುವೆನೇ ಕಣ್ಣ ಹನಿ ಉದುರಿಸದೇ ಸಣ್ಣ ಹೊಟ್ಟೆ ಉರಿ- ಇವಳು ಇಷ್ಟಾದರೂ ಘಟ್ಟಿ; ಅಡಗಿ ಕೂತವರನ್ನೆಲ್ಲ ಎಳೆದು ತಂದು ಸಿಪ್ಪೆ ಸುಲಿದು. ಕಚ ಕಚನೇ ಕೊಚ್ಚಿ ಬೇಯಿಸಿ ಬಾಡಿಸಿ, ಉಪ್ಪು ಹುಳಿ ಖಾರ, ಉರಿ ಉರಿ ಕೂಗಿದರೂ ಬಿಡದ ಘೋರ ಹಳೆಯ ದ್ವೇಶವೆಲ್ಲ ತೀರಿಸಿಕೊಂಡ ಹಗುರ ಅಮರಿಕೊಂಡ ಅಸಹಾಯಕತೆಯ ಅಸಹನೆ ಕೊಡವಿಕೊಂಡ ನಿರಾಳ ಎಲ್ಲ ಮುಗಿದ ಮೇಲೂ ಏನೂ ಆಗದಂತೆ ಕಣ್ತುದಿಯ ಹನಿಯೊಂದು ಇಂಗಿದಂತೆ ಅಗಲ ನಗೆಯಲಿ ಎಲ್ಲವೂ ಖಾಲಿ ಖಾಲಿ ಕುರುಹೂ ಇಲ್ಲದ ರಣರಂಗದಲಿ ಖಿಲ ಕಿಲನೇ ನಗುವ ಅವಳ ಖಯಾಲಿ.. ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗೆಳತಿ ನಕ್ಕುಬಿಡು ಮೂಗಪ್ಪ ಗಾಳೇರ ನಾನು ನೋಡಿದ ಹುಡುಗಿಯರೆಲ್ಲಾ….. ಪ್ರೇಯಸಿಯರಾಗಿದ್ದರೆ ನಾನು ಗೀಚಿದ ಸಾಲುಗಳೆಲ್ಲಾ ಕವಿತೆಗಳಾಗಬೇಕಿತ್ತಲ್ಲ! ದಡ್ಡಿ….. ನಿನಗಿನ್ನೂ ಹಗಲು ಮತ್ತು ರಾತ್ರಿಯ ವ್ಯತ್ಯಾಸ ಗೊತ್ತಿದ್ದಂತೆ ಕಾಣುತ್ತಿಲ್ಲ! ಕತ್ತಲನ್ನು ನುಂಗಿ ಬೆಳಕಾಯಿತೋ…! ಬೆಳಕನ್ನು ನುಂಗಿ ಕತ್ತಲಾಯಿತೋ…! ನೀನು ನನ್ನ ಜೊತೆ ಇಟ್ಟ ಒಂದೊಂದು ಹೆಜ್ಜೆಯೂ ಹಳೆ ಸಿನಿಮಾದ ಹಾಡುಗಳಂತೆ ನನ್ನೆದೆಯಲ್ಲಿ ಯಾವಾಗಲೂ ಗುನುಗುತ್ತಿರುತ್ತವೆ ಒಮ್ಮೊಮ್ಮೆ ಎದೆಭಾರ ಆದಾಗ ಕವಿತೆಯ ಸಾಲು ಬೇರೆಯಾಗಬಹುದು ಕವಿತೆ ಮಾತ್ರ ಎಂದೆಂದೂ ನೀನೆ ಒಂದೊಮ್ಮೆ ನನ್ನ ಕವಿತೆಯ ಸಾಲುಗಳನ್ನು ಯಾರೋ ಓದುತ್ತಿದ್ದಾರೆಂದರೆ ಅದು ನಮ್ಮಿಬ್ಬರ ನಡುವಿನ ಪ್ರೀತಿಯ ಪಲ್ಲವಟವೆಂದೆ ಕರೆಯಬಹುದು ಹಾಗೆ ಪಲ್ಲಟ ವಾದ ಈ ಪ್ರೀತಿಗೆ ಯಾವ ಪ್ರೇಮಿಗಳು ಸಾಟಿ ಹೇಳು ಗೆಳತಿ ಒಮ್ಮೆ ನಕ್ಕು ಬಿಡು ಮಲ್ಲಿಗೆಯ ದಳದಲ್ಲಿಯೂ ನಿನ್ನ ಮನಸ್ಸಿನ ಯವ್ವನವ ಗೀಚಿರುವೆ ಕಡಲ ಮುತ್ತಿನಲ್ಲಿಯೂ ಪ್ರೀತಿಯ ಒಡಲ ಕಟ್ಟಿರುವೆ| ************************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ದೇವರ ದೇವ ಅಂಜನಾ ಹೆಗಡೆ ಕಾಲ ಎಲ್ಲವನ್ನೂ ಮರೆಸುತ್ತದೆ ಎಂದವ ಕಾಲಕ್ಕೆ ಕಿವುಡಾಗಿ ಕಣ್ಣುಮುಚ್ಚಿ ಉಟ್ಟಬಟ್ಟೆಯಲ್ಲೇ ಧ್ಯಾನಕ್ಕೆ ಕುಳಿತಿದ್ದಾನೆ ತಂಬೂರಿ ಹಿಡಿದು ತಂತಿಗಳ ಮೇಲೆ ಬೆರಳಾಡಿಸುತ್ತ ಶ್ರುತಿ ಹಿಡಿಯುತ್ತಾನೆ ಬೆರಳಲ್ಲಿ ಹುಟ್ಟಿದ ಬೆಳಕಿನ ಕಿರಣವೊಂದು ನರಗಳಗುಂಟ ಹರಿದು ಬೆಂಕಿಯಾಗಿ ಮೈಗೇರಿದೆ ಉಸಿರೆಳೆದುಕೊಳ್ಳುತ್ತಾನೆ ದೇವರ ಗೆಟಪ್ಪಿನಲ್ಲಿ ಕಾಲಮೇಲೆ ಕೈಯೂರಿದ್ದಾನೆ ಕಪ್ಪು ಫ್ರೆಮಿನ ದಪ್ಪಗಾಜಿನ ಕನ್ನಡಕ ರೂಪಕವಾಗಿ ಮುಚ್ಚಿದ ಕಿವಿಯ ಮೇಲೆ ಬೆಚ್ಚಗೆ ಕೂತಿದೆ ಕೈಗೆ ಸಿಗದ ಕಣ್ಣಿಗೆ ಕಾಣಿಸದ ಶಬ್ದ ಹಿಡಿಯಲು ಕುಳಿತವನ ಮೈಯೆಲ್ಲ ಕಣ್ಣು…. ಮುಚ್ಚಿದ ಕಣ್ಣೊಳಗೊಂದು ರಾಗ ತೆರೆದರೆ ಇನ್ಯಾವುದೋ ತಾಳ ಮೈಮರೆಯುತ್ತಾನೆ ರೆಪ್ಪೆಗೊತ್ತಿದ ತುಟಿಗಳನ್ನು ಧಿಕ್ಕರಿಸಿದವನ ಹಣೆಮೇಲಿಂದ ಬೆವರಹನಿಯೊಂದು ಲಯತಪ್ಪದಂತೆ ಮುತ್ತಾಗಿ ತುಟಿಗಿಳಿದಿದೆ ಕಾಲವನ್ನೇ ಮರೆಯುತ್ತಾನೆ ಕಾಲವನ್ನು ಮರೆಸುವವ ಕಳಚಿಕೊಂಡ ಕಣ್ಣರೆಪ್ಪೆಯೊಂದು ಧ್ಯಾನ ಮರೆತಿದೆ ********************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಷರಾ ಬರೆಯದ ಕವಿತೆ ಡಾ.ಗೋವಿಂದ ಹೆಗಡೆ ಇಂದು ಅವ ತೀರಿದನಂತೆ ತುಂಬ ದಿನಗಳಿಂದ ಅವ ಬದುಕಿದ್ದೇ ಗೊತ್ತಿರಲಿಲ್ಲ ಒಂದು ಕಾಲದಲ್ಲಿ ನೆಲ ನಡುಗಿಸುವ ಹೆಜ್ಜೆಯ ಭಾರಿ ಮೀಸೆಯ ಹುಲಿ ಕಣ್ಣುಗಳ ಅವ ನಡೆಯುತ್ತಿದ್ದರೆ ನನಗೆ ಮಂಚದ ಕೆಳಗೆ ಅವಿತು ಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಆಗ ಕವಿತೆ ಕನಸಲ್ಲೂ ಸುಳಿಯುತ್ತಿರಲಿಲ್ಲ ಮತ್ತೆ ಯಾವಾಗಲೋ “ಅವನಾ? ತುಂಬಾ ಕುಡೀತಾನೆ ರೈಲಿನ ಎಂಜಿನ್ ಹಾಗೆ ಸದಾ ಹೊಗೆ ಬಿಡ್ತಾನೆ” ಹೊಟ್ಟೆ ಊದಿ ಕಣ್ಣು ಹಳದಿಗೆ ತಿರುಗಿ ಲಿವರ್ ಫೇಲ್ಯೂರ್ ನ ದಯನೀಯ ಪ್ರತಿಮೆ ಆಗಲೂ ಹೆಂಡತಿಗೆ ಹೊಡೆಯುತ್ತಿದ್ದ ಭೂಪ ಅವನ ಸೇವೆಗೆಂದೇ ಹುಟ್ಟಿದಂತಿದ್ದ ಅವಳ ಕಣ್ಣುಗಳಲ್ಲಿ ಸದಾ ಉರಿಯುತ್ತಿದ್ದ ಶೂನ್ಯ ಅವು ನಗುತ್ತಲೇ ಇರಲಿಲ್ಲ ಮನುಷ್ಯ ಯಾವಾಗ ಸಾಯಲು ಆರಂಭಿಸ್ತಾನೆ ಕವಿತೆ ಹೇಳುವುದಿಲ್ಲ ಇಂದು ಬರೆಯಹೊರಟರೆ ಬರೀ ಅಡ್ಡ ಉದ್ದ ಗೀಟು ಗೋಜಲು ಷರಾ ಬರೆದರೆ ಬದುಕಿಗೆ ಕವಿತೆಯಾಗುವುದಿಲ್ಲ ಸಾವು ಉಳಿಸುವ ಖಾಲಿತನ ಯಾವ ಷರಾಕ್ಕೂ ದಕ್ಕುವುದಿಲ್ಲ *****************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹೀಗೊಂದುಕವಿತೆ ವಿಜಯಶ್ರೀ ಹಾಲಾಡಿ ನರಳುತ್ತಿರುವ ಬೀದಿನಾಯಿಯಮುಗ್ಧ ಆತ್ಮಕ್ಕೂಅದ ಕಂಡೂ ಕಾಣದಂತಿರುವನನ್ನ ದರಿದ್ರ ಆತ್ಮಕ್ಕೂಅಗಾಧ ವ್ಯತ್ಯಾಸವಿದೆ ! ಮಗುವಿಗೆ ಉಣಿಸು ಕೊಡುವನನ್ನ ಕೈಗಳೇಬೀದಿ ನಾಯಿಮರಿನಿಮ್ಮ ಮಗುವಲ್ಲವೇ? ? ತಿನಿಸು ಉಡುಪು ದುಡ್ಡುಖುಷಿ ನಗು ಗಿಗುಎಲ್ಲ ನಿನಗೇ ಎಂದುಭಾವಿಸುವ ಮೂರ್ಖ ವಿಜೀಅನ್ನವಿಲ್ಲದ ನೆಲೆಯಿಲ್ಲದಆ ಮೂಕಪ್ರಾಣಿಗಳಿಗೇನುಉತ್ತರಿಸುವೆ? ಯಾರೋ ಹೊಡೆದರುಮರಿನಾಯಿ ಅತ್ತಿತುತಾಯಿ ಜೀವಅದೆಷ್ಟನೆ ಸಲವೋಸತ್ತಿತು! !*****************************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಶಶಿಕಾಂತೆ ನೀನು ಮುಗ್ದೆ,ಅಮಾಯಕಿ,ಮೋಸ ಮಾಡಲಾರೆ ನಿನಗೆ ಎಂದನವಳಿಗವನು ಸಾಕಿ.. ಮೋಸ ಮಾಡಿದರೆ ದೇವರೊಳಿತು ಮಾಡೋಲ್ಲ ಎಂದು ನಂಬಿಸಿದನು ಸಾಕಿ.. ನನ್ನ ಸ್ವಂತ ನೀನು,ನಿನ್ನ ಸ್ವಂತ ನಾನು ಎಂದು ಪ್ರೀತಿಮಳೆಗರೆದಾಗ ಸೋತಳು. ಪ್ರೀತಿಯನ್ನೇ ಕಾಣದ ಹೆಣ್ಣೊಂದು ನಂಬದಿರಲು ಸಾಧ್ಯವೇ ಅಂತಹವನನು ಸಾಕಿ.. ದೇವತೆ ಅವಳು ಕೇಳಿದ ವರ ಕೊಡುವಳು ತನ್ನನ್ನು ಪ್ರೀತಿಸುವವರಿಗೆ. ಉಪಯೋಗ ಪಡೆದು ಮರೆಯಾದ ಕಣ್ಣಿಂದ ಬಹಳದೂರ ಮನೆಹಾಳನವನು ಸಾಕಿ. ಫಕೀರ,ಸಂತನೆಂದರೆ ತಾನೇ ಎಂಬ ಮಾತಿಗೆ ಜನ ಮರುಳಾದರು ತಿಳುವಳಿಕೆಯಿಲ್ಲದವರು ಅವಳಂತೆ.. ಅವನ ಆಟ ನೋಡುತಾ,ಅವನಿಗೇ ಕಿರೀಟ ತೊಡಿಸುತಾ ಇದ್ದಾರೆ ಜನ, ದೇವರಿದ್ದಾನೇನು ಸಾಕಿ.. ಆ ಶಶಿಯೊಬ್ಬನೇ ಅವಳ ಗೆಳೆಯ ಅವಳ ನಗಿಸಲು ಸದಾ ನಗುಮೊಗ ತೋರುತಿರುವ. ಅಲ್ಲಾನೋ,ಏಸುವೋ,ರಾಮನೋ ದೇವರಿಗೆ ಅವಳ ಕೊರಗು,ಕಣ್ಣೀರು ಕಾಣದಾಯ್ತೇನು ಸಾಕಿ.. ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಶವದಮಾತು ಪ್ಯಾರಿಸುತ ಶವದ ಮನೆಮುಂದೆ ನಿರರ್ಥಕಭಾವದ ಬೆಂಕಿಮಡಿಕೆಯೊಂದು ಹೊಗೆಯ ಉಗುಳುತಾ ಕುಳಿತಿದೆ…! ಕಾಯುತ್ತಿದ್ದದ್ದು ಯಾರಿಗೆಂದು ಬಲ್ಲಿರಾ…? ಚಟ್ಟವೊಂದು ಕಾಯುತ್ತಿದ್ದದ್ದು ನನಗೆ ಮಾತ್ರ ಅಲ್ಲವೇ..? ಅಂತ್ಯಯಾತ್ರೆಗೆ ಬಿಳ್ಕೊಡಲು ನಮ್ಮವರು ಬರುವುದು ಯಾರಾದರೂ ಕಂಡಿರಾ..? ಬರುವವರೆಲ್ಲರೂ ಮನೆವರೆಗೆ ಮಾತ್ರ ಬಂದವರೆಲ್ಲ ಮಸಣದ ಮಧ್ಯನಿಂತು ಮರಳಿ ಹೋಗುವವರು ಎತ್ತೋವರೆಗೂ ಅವರು ಬರ್ತಾರೆ ಇವರು ಬರ್ತಾರೆ, ಎತ್ತಿದ ಮೇಲೆ ಅವರು ಬಂದಿದ್ದಾರೆಯೇ…?ಇವರು ಬಂದಿದ್ದಾರೆಯೇ…? ಸ್ಮಶಾನದ ಹಾದಿ ಮಧ್ಯ ಅವರು ಬರುವವರಿದ್ದರು ಇವರು ಬರುವವರಿದ್ದರು ಚಿತೆಮೇಲೆ ಇಟ್ಟಾಗ ಅವರು ಬರಬೇಕಿತ್ತು ಇವರು ಬರಬೇಕಿತ್ತು ಸುಡಲು ಆರಂಭಿಸುತ್ತಿದಂತೆ ಅವರು ಬರಲೇ ಇಲ್ಲ ಇವರು ಬರಲೇ ಇಲ್ಲ… ಅವರೆಲ್ಲ ಯಾರು ಕಷ್ಟದಲ್ಲಿ ನೆಂಟರಾದವರಾ..? ಬಂಧುಬಳಗ ಎನಿಸಿದವರಾ..? ಅಣ್ಣತಮ್ಮಂದಿರಂತೆ ಇದ್ದವರಾ…? ಜೀವ ಕೊಟ್ಟು ಜೀವ ಉಳಿಸಲು ಹೆಣಗಿದವರಾ…? ಅಲ್ಲವೇ ಅಲ್ಲ ..! ನಮ್ಮವರು ಯಾರು ಕಾಣಲೇ ಇಲ್ಲ ಕಂಡವರೆಲ್ಲರು ನಮ್ಮಂತೆ ಇದ್ದವರು… *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಧಿಕ್ಕಾರವಿರಲಿ                            ಗೌರಿ.ಚಂದ್ರಕೇಸರಿ ನೇಣಿನ ಕುಣಿಕೆಯ ನೆನೆದು ಝಲ್ಲನೆ ಬೆವರುವ ನೀವು ಎರಡು ಕ್ಷಣದ ನೋವಿಗೆ ಕೊರಳೊಡ್ಡಲಾರದ ರಣ ಹೇಡಿಗಳು ಅರಳಿ ನಿಂತು ನಸು ನಗುವ ಹೂವನ್ನು ಹೊಸಕಿ ಹಾಕುವಾಗಿನ ಭಂಡತನ ಯಾರದೋ ಮನೆಯ ನಂದಾ ದೀಪವ ನಂದಿಸಿ ಗಹ ಗಹಿಸಿ ನಕ್ಕು ನಲಿದ ನಿಮ್ಮ ಗುಂಡಿಗೆಯ ಕುದಿ ರಕ್ತ ಗಲ್ಲು ನೆನೆದು ಗಡ್ಡೆ ಕಟ್ಟಿತೆ? ಹೆಣ್ಣಿನಲ್ಲಿ ತಾಯ ತಂಗಿಯರ ಕಾಣದ ನೀವು ಹುಣ್ಣೊಳಗಿನ ಹುಳುಗಳು ಯಾರದೋ ತೋಟದ ಸುಮಗಳನು ಹೊಸಕಿ ಹಾಕಿ ಅಟ್ಟಹಾಸದ ಮೀಸೆಯ ಹುರಿಗೊಳಿಸುವ ನೀವೆಂದರೆ ಕೊರಳಿಗೆ ಬೀಳುವ ಹಗ್ಗಕ್ಕೂ ಹೇಸಿಗೆ ನಿಮ್ಮ ಸಾವಿನ ದಿನವನ್ನು ನೆನೆ ನೆನೆದು ಸುರಿಸುವ ನಿಮ್ಮವರ ಕಣ್ಣೀರಿಗೆ, ನೇಣು ಬೇಡವೆಂಬ ಅವರ ಕೂಗಿಗೆ ಹೆಣ್ಣು ಹೆತ್ತವರದೊಂದು ಧಿಕ್ಕಾರವಿರಲಿ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಚಂದ ಕಣೆ ನೀನು ಅವ್ಯಕ್ತ ಕಣ್ಣಿನಲ್ಲೇ ಅರ್ಥವಾಗಿಯೂ ಆಗದಂತೆ  ಆಡುವ ಮಾತುಗಳ ಸವಿ ಚೆಂದ.. ತುಟಿಯಂಚಿನಲಿ ಹಿಡಿದಿಟ್ಟಿರುವ ಒಲವಿನ  ರಸಗವಳದ ಕೆನ್ನೀರ ಪರಿ ಚೆಂದ.. ಕೇಳಿಯೂ ಕೇಳದಂತೆ ಆಡುವ  ಹೆಜ್ಜೆ ಗೆಜ್ಜೆಗಳ ನಲಿವು ಚೆಂದ,. ಚಂದ ಕಣೆ ನೀನು ಹೇಗಿದಿಯೋ ಹಾಗೆ ಚಂದ… ಸೊಂಟದ ಬಳುಕಿನಲ್ಲಿ ಲೋಕವನ್ನೇ ಆಡಿಸುತ ತಾನೇ ಆಡುವ ಪರಿ ಚೆಂದ.. ಏರಿಳಿತಗಳ ಲೆಕ್ಕವಿಡದೆ ,ರಸಿಕತೆಯ ಸವಿಯುಣಿಸಿ ನಾನಲ್ಲ ನನ್ನದಲ್ಲ ಎಂಬ ಸುಳ್ಳೇ ಚೆಂದ.. ಪ್ರೀತಿಯ ತುಂತುರು ಮಳೆಯಲಿ ನೀರಾಗಿ  ಸಮುದ್ರದಾಳದ ಮುತ್ತಾಗ ಬಯಕೆಯೇ ಚೆಂದ… ಚಂದ ಕಣೆ ನೀನು ಹೇಗಿದಿಯೋ ಹಾಗೆ ಚಂದ… ಮೋಹದ ಮಿಶ್ರಪಾಕದಲಿ ಶೀತಲದುರಿಯ ಮೋಸ ಬೀಸಿರುವ ಸಾತ್ವಿಕತೆಯೇ ಚೆಂದ.. ಪ್ರೇಮಾಂಕುರಕೆ ಅಂಕುಶ ಹಾಕಿದಂತೆ ಮಾಡಿ ಶಿಲೆಯ ಮಿಡಿತವ ಕದರುವುದೇ ಚೆಂದ.. ಕಾಮಾಂಕುಷಗಳ ಹೂವು ಎಳೆಯಂತೆ ಹಿಡಿದು ಸರಿಸಿ  ಗಾಳಿ ಸೋಕದಂತೆ ತೇಲಿಯ ಹೋಗುವ ಗರಿಯೇ ಚೆಂದ ಚಂದ ಕಣೆ ನೀನು ಹೇಗಿದಿಯೋ ಹಾಗೆ ಚಂದ… ನಿಂದಿಸಲಿ, ಛೇಡಿಸಲಿ, ನಗಲಿ ಯಾರೇನೇ ಹೇಳಲಿ ಇರಲಿ ಬಿಡು, ಅಷ್ಟೇ.. XX ವರ್ಣತಂತು ಇರುವ ಸಾಮಾನ್ಯ ಜೀವಿಯೆಂದರೆ ಇರಲಿ ಬಿಡು, ಅಷ್ಟೇ.. ಕಾಲ್ಗೆಜ್ಜೆ ಕೈಬಳೆ ಬೊಟ್ಟು ಸೀರೆ ಹಳೆಕಾಲ ಎಂದರೆ ಇರಲಿ ಬಿಡು, ಅಷ್ಟೇ.. ಬಿಗಿದ ಬಟ್ಟೆ ಎತ್ತರದ ಸ್ಯಾಂಡಲ್ ದಾರಿತಪ್ಪಿದಳೆಂದರೆ ಇರಲಿ ಬಿಡು, ಅಷ್ಟೇ.. ಮೋಹಗಾರ್ತಿ ಮೋಜುಗಾರ್ತಿ ಜಂಬಗಾರ್ತಿ ಎಂದರೆ ಇರಲಿ ಬಿಡು, ಅಷ್ಟೇ.. ಅಮ್ಮ ಅಕ್ಕ ತಂಗಿ ಮಗಳು ಅಜ್ಜಿ ಗೆಳತಿ ಒಡತಿ ಪ್ರೇಯಸಿ ಮನದರಸಿ ಎಲ್ಲಾ ನೀನೆ….  ನಿನ್ನೊಳಗಿನ ಭಾವ ಅದರ ಮರ್ಮ ಆರಿತವಳು ನೀನೊಬ್ಬಳೇ ಸಖಿ… ಚಂದ ಕಣೆ ನೀನು ಹೇಗಿದಿಯೋ ಹಾಗೆ ಚಂದ… ***********************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ ರಾಮಸ್ನಾಮಿ ಡಿ.ಎಸ್ ಸಂಗೀತಕಛೇರಿಯತಂಬೂರಿಶೃತಿಹೆಣ್ಣು. ಬಿಗಿತ ಹೆಚ್ಚಾದರೆತುಂಡಾಗುವ ತಂತಿಸಡಿಲಾದರೆ ಹೊಮ್ಮದು ನಾದ ತನ್ನ ಕಂಠಸಿರಿಗೆತಕ್ಕಂತೆ ಶೃತಿಹೊಂದಿಸಿಕೊಳ್ಳುವುದುಗಾಯಕನ ಜವಾಬ್ದಾರಿ. ವೀಣೆ ಸಿತಾರು ಸರೋದುಗಳನ್ನುಬೆರಳಿನಿಂದಲೇ ನುಡಿಸಬಹುದಾದರೂರಕ್ಷಣೆಗೆ ಕವಚ ಇರುವಂತೆಯೇಪಿಟೀಲು ನುಡಿಯುವುದು ಕಮಾನಿಗೆ ಶೃತಿ ತಪ್ಪದೇ ಇದ್ದರೆಕಛೇರಿ ಕಳೆಗಟ್ಟುವುದಕ್ಕೆಇದ್ದೇ ಇವೆ ಪಕ್ಕ ವಾದ್ಯದಸಹಕಾರ, ತನಿ ಆವರ್ತನ. ಸಂಸಾರದ ಕಛೇರಿಯೂಥೇಟು ಸಂಗೀತದ ಹಾಗೇ ಶೃತಿ ತಪ್ಪದ ಹಾಗೆತಾಳ ಮರೆಯದ ಹಾಗೆಪರಸ್ಪರರ ಗೌರವಕ್ಕೆ ಹಾನಿ ಮಾಡದ ಹಾಗೆ ಬದುಕ ಹಾಡು ಹಾಡಬೇಕುಇಹದ ಇರವ ಮರೆಯಬೇಕು. *******

ಕಾವ್ಯಯಾನ Read Post »

You cannot copy content of this page

Scroll to Top