ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ನಿಮ್ಮೊಂದಿಗೆ

ಮೌನ ಹನಿಗಳು

ಕವಿತೆ ಮೌನ ಹನಿಗಳು ಸುಧಾ ಎನ್.ತೇಲ್ಕರ್ ೧ಹೊಂದಿಕೆಯಿರದ ಭಾವಗಳಲಿಮಾತು ಮದ್ದಳೆ ಬಾರಿಸಿತ್ತುಉಸಿರು ಬಿಗಿ ಹಿಡಿದ ಮೌನಸದ್ದಿಲ್ಲದೆ ಪಟ್ಟು ಬಿಗಿದಿತ್ತು ೨ಮೌನದ ಕಪ್ಪೆ ಚಿಪ್ಪಲ್ಲಿ ಅಡಗಿತ್ತುಮಾತಿನ ಸ್ವಾತಿ ಮುತ್ತುಕಣ್ರೆಪ್ಪೆಯಲಿ ಜಾರದೆ ಕುಳಿತಿತ್ತುಮಡುಗಟ್ಟಿದ ಹನಿ ಮುತ್ತು ೩ಮಾತಿನ ಚೂರಿ ಮೊನಚಿಗೆಹೃದಯ ರಕ್ತ ಒಸರಿತ್ತುನಿಟ್ಟುಸಿರಿನ ಮೌನವೇಗಾಯಕ್ಕೆ ಮುಲಾಮು ಸವರಿತ್ತು ೪ಮಾತು ಕಲಹದ ಹೊನಲಾಗಿಹರಿದಿತ್ತುಮೌನವೇ ಅದರ ರಭಸಕೆಆಣೆಕಟ್ಟು ಹಾಕಿತ್ತು ೫ಬೆಳ್ಳಿ ನುಡಿಗಳುತುಂಬಿದ್ದ ಖಜಾನೆಗೆಹಾಕಿತ್ತು ಚಿನ್ನದಮೌನದ ಬೀಗ ********************

ಮೌನ ಹನಿಗಳು Read Post »

ಇತರೆ, ನಿಮ್ಮೊಂದಿಗೆ

ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ

ಲೇಖನ ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಡಾ.ಸುಜಾತಾ.ಸಿ.                                     “ನೀನು ನಂಗೊAದು ರೊಟ್ಟಿ ಕೊಟ್ರೆ                                     ಒಂದು ದಿವ್ಸ ಹಸಿವನ್ನ ತೀರಿಸ್ದಂಗೆ                                     ರೊಟ್ಟಿಗಳಿಸೋದು ಹೆಂಗೇAತ ಕಲಿಸಿದ್ರೆ                                     ಗಳಿಸೋ ಅವಕಾಶ ಕಿತ್ಕಳೋ ತಂಕ                                     ನನ್ನ ಹಸಿವನ್ನ ತೀರ್ಸಿದಂಗೆ                                     ಅದೇ ನಿನೇನಾದ್ರೂ ವಿದ್ಯೆ ಕಲ್ಸಿ                                     ಒಗ್ಗಟ್ಟಾಗಿ ಹೋರಾಡೋದು ಕಲ್ಸಿದ್ಯಾ?                                     ಏನ್ಬೇಕಾದ್ರೂ ಆಗ್ಲಿ, ಯಾವ ಕಷ್ಟನಾದ್ರೂ ಬರಲಿ                                     ಎಲ್ಲ ಒಟ್ ಸೇರಿ                                     ನಮ್ ದಾರಿ ನಾವು ಹುಡುಕೋದ ಹೇಳಿಕೊಟ್ಟಂಗೆ” ಭಾರತದ ಮೊದಲ ಮಹಿಳಾ ಶಿಕ್ಷಕಿ ಹಾಗೂ ಅಪ್ಪಟ ಸ್ತ್ರೀವಾವಾದ ಚಿಂತಕಿ ಮಾತೆ ಸಾವಿತ್ರಿ ಭಾ ಫುಲೆ ಅವರಿಗೆ ಮಹಿಳೆಯರ ಬಗ್ಗೆ ಇದ್ದ ಕಾಳಜಿ ಮತ್ತು ಪ್ರೇಮ ಅವರ ಬದುಕು ಮತ್ತು ಬರಹದಲ್ಲಿ ಕಾಣಸಿಗುತ್ತದೆ. ಮೇಲಿನ ಕವಿತೆಯನ್ನು ನೋಡಿದರೆ ಮಹಿಳೆಯರಿಗೆ ಬಹಳ ಮುಖ್ಯವಾದುದು ಶಿಕ್ಷಣವೆಂಬುದನ್ನು ಸಾರಿ ಹೇಳುತ್ತದೆ. ಇಂತಹ ತಾಯಿಯನ್ನು ನಾವು ಪದೇ ಪದೇ ನೆನೆಯಬೇಕು ಹಾಗೇ ಅವಳ ಹೆಜ್ಜೆಯಲ್ಲಿಯೇ ನಮ್ಮ ಹೆಜ್ಜೆಗಳನ್ನು ಇಡುವದರಿಂದ ಮಾತ್ರ ಅವಳ ಹೋರಾಟಕ್ಕೆ ಸಾರ್ಥಕತೆ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಭಾರತೀಯರಿಗೆ ಅದರಲ್ಲೂ ಶೂದ್ರಾತಿಶೂದ್ರ ಬಹುಸಂಖ್ಯಾತರಿಗೆ ಹಾಗೂ ಭಾರತದ ಹೆಣ್ಣು ಮಕ್ಕಳಿಗೆ ವಿದ್ಯೆ ಕಲಿಸಲು ತನ್ನ ಇಡೀ ಜೀವನವನ್ನೇ ಮುಡುಪಾಗಿಟ್ಟು ಅಕ್ಷರ ಬೀಜವನ್ನು ಬಿತ್ತಿ ಕ್ರಾಂತಿಯನ್ನೇ ಹುಟ್ಟು ಹಾಕಿದ ದಿಟ್ಟ ಮಹಿಳೆ ಅವ್ವ ಸಾವಿತ್ರಿ ಬಾಯಿ ಫುಲೆ. ಸಾವಿತ್ರಿ ಬಾಯಿ ಅವರು ಬಡ ರೈತ ಕುಟುಂಬದಲ್ಲಿ ಶಿರವಳ ಹತ್ತಿರವಿರುವ ನಾಯಗಾವ ಎಂಬ ಹಳ್ಳಿಯಲ್ಲಿ ಝಗಡ ಪಾಟೀಲರ ಮಗಳಾಗಿ ೩ ನೇ ಜನೇವರಿ ೧೮೩೧ ರಲ್ಲಿ ಜನಿಸಿದರು. ಸಾವಿತ್ರಿಬಾಯಿ ಅವರಿಗೆ ಎಂಟು ವರುಷವಿರುವಾಗ ಗೋವಿಂದರಾವ್ ಅವರ ಮಗ ಜ್ಯೋತಿ ಬಾ ಫುಲೆ ಅವರಿಗೆ ಹದಿಮೂರು ವರ್ಷ ಇರುವಾಗ ವಿವಾಹ ಮಾಡುತ್ತಾರೆ. ಸಾವಿತ್ರಿಬಾಯಿ ಹುಟ್ಟಿದ ಊರಲ್ಲಿ ಶಿಕ್ಷಣದ ಪರಂಪರೆ ಇರಲಿಲ್ಲ. ಅನಕ್ಷರಸ್ಥಳಾದ ಸಾವಿತ್ರಿಯನ್ನು ಮದುವೆಯಾವ ಜ್ಯೋತಿಭಾ ಅಕ್ಷರ ಕಲಿಸಲು ಒರ್ವ ಶಿಕ್ಷಕನನ್ನು ನೇಮಿಸುತ್ತಾರೆ. ಆ ಶಿಕ್ಷಕರು ಕೇಶವ ಶಿವರಾಮ ಭಾವಳ್ಕರ ಎಂಬುವವರು. ಸಾವಿತ್ರಿಬಾಯಿಯವರಿಗೆ ಕಲಿಸಲು ಒಪ್ಪಿಕೊಂಡು ಅಕ್ಷರದ ಅಭ್ಯಾಸವನ್ನು ಮಾಡಿಸುತ್ತಾರೆ. ಹಾಗೆ ಸಮಯ ಸಿಕ್ಕಾಗ ಜ್ಯೋತಿಬಾಫುಲೆ ಅವರು  ಕೂಡಾ ಪಾಠ ಮಾಡಲು ಅಣಿಯಾಗುತ್ತಿದ್ದರು. ಇದರಿಂದ ಸಾವಿತ್ರಿಬಾಯಿ ಫುಲೆ ಅವರು ಸಂಗಾತಿ ಜ್ಯೋತಿಬಾಫುಲೆ ಅವರ ಹೆಗಲಿಗೆ ಹೆಗಲು ಕೊಟ್ಟು ಕ್ರಾಂತಿಯ ಜ್ಯೋತಿಯನ್ನು ಹಚ್ಚಲು ಕಾರಣವಾಯಿತು. ಸಮಾಜದ ಅನೇಕ ಮೌಢ್ಯಗಳನ್ನು ಶಿಕ್ಷಣದ ಅರಿವಿನ ಮೂಖಾಂತರ ಹೊರದೂಡುವ ಕೆಲಸವನ್ನು ದಂಪತಿಗಳು ಮಾಡಿದರು. ಅಕ್ಷರ ಕಲಿತ ಸಾವಿತ್ರಿಯವರು ಸುಮ್ಮನೆ ಕೂಡುವ ಜಾಯಮಾನದವಳಾಗಿರದೇ ತಮ್ಮ ಮನೆಯನ್ನೇ ಮೊಟ್ಟ ಮೊದಲಿಗೆ ಶಾಲೆಯನ್ನಾಗಿ ಮಾಡಿ ಗಂಡ ಹೆಂಡತಿ ಇಬ್ಬರು ಸೇರಿ ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಸುತ್ತಾರೆ. ಜ್ಯೋತಿಬಾ ಅವರಿಗೆ ಹಿಂದೂ ಸ್ತ್ರೀಯರಿಗೆ ವಿಮೋಚನೆ ಮಾಡುವದು ಪ್ರಥಮ ಆದ್ಯ ಕರ್ತವ್ಯವೆಂದು ತಿಳಿದು ಎಲ್ಲ ಹೆಣ್ಣು ಮಕ್ಕಳ ಹಾಗೂ ಶೂದ್ರರಿಗೆ ಶಿಕ್ಷಣವನ್ನು ಕೊಡಲು ನಿರ್ಧರಿಸುತ್ತಾರೆ. ಒಂದು ದಿನ ಜ್ಯೋತಿಬಾ ಫುಲೆ ಅವರು ಮಿಸ್ ಫೆರಾರ್ ಅವರು ನಗರದಲ್ಲಿ ಅಮೇರಿಕನ್ ಮಿಷನ್ ನಡೆಸುತ್ತಿದ್ದ ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡುತ್ತಾರೆ. ಅಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ವ್ಯವಸ್ಥೆಯನ್ನು ನೋಡಿ ತಾವು ಕೂಡ ಹಾಗೆ ಶಿಕ್ಷಣವನ್ನು ಕೊಡಿಸಬೇಕು ಎಂದು ಅವರನ್ನು ನೋಡಿ ಬಹಳವಾಗಿ ಪ್ರಭಾವಿತರಾಗುತ್ತಾರೆ. ೧೮೪೮ ರಲ್ಲಿ ಕೆಳಜಾತಿಯ ಹೆಣ್ಣು ಮಕ್ಕಳ ಶಾಲೆಯನ್ನು ಪ್ರಾರಂಭಿಸುತ್ತಾರೆ. ಸಂಪ್ರದಾಯವಾದಿಗಳಿಂದ ಈ ಶಾಲೆ ಬಹುಬೇಗ ಮುಚ್ಚಿ ಹೋಗುತ್ತದೆ. ಮರಳಿ ಪ್ರಯತ್ನ ಮಾಡು ಎಂಬಂತೆ ಪುಣಿಯ ಬುಧವಾರ ಪೇಟೆಯಲ್ಲಿರುವ ಬಿಢೆ ಎಂಬುವರ ಮನೆಯಲ್ಲಿ ಶಾಲೆಯನ್ನು ತೆರೆಯುತ್ತಾರೆ. ಅಹಮ್ಮದ ನಗರದ ಮಿಸ್ ಫರಾರ್ ಫಾರ್ಮಲ್ ಸ್ಕೂಲಿಗೆ ಶಿಕ್ಷಕ ತರಬೇತಿ ಪಡೆದುಕೊಳ್ಳಲು ಕಳಿಸುತ್ತಾರೆ. ಅದೇ ಶಾಲೆಯಲ್ಲಿ ಫಾತಿಮಾ ಶೇಕ್ ಎಂಬಾಕೆಯೂ ಕೂಡಾ ಕಲಿಯುತ್ತಿರುತ್ತಾರೆ. ಸಾವಿತ್ರಿಬಾಯಿ ಫುಲೆ ಅವರ ಕನಸಿಗೆ ನೀರೆಯುವಂತೆ ಫಾತಿಮಾಳು ಕೂಡಾ ಶಿಕ್ಷಕ ವೃತ್ತಿಯನ್ನು ಸಾವಿತ್ರಿಬಾಯಿ ಅವರ ಜೊತೆಗೂಡಿ ಕೆಲಸದಲ್ಲಿ ತೊಡಗಿಸಿಕೊಂಡರು. ಸಾವಿತ್ರಿ ಬಾಯಿ ಫುಲೆ ಅವರ ಶಿಕ್ಷಕ ವೃತ್ತಿ ಇಲ್ಲಿಂದಲೇ ಪ್ರಾರಂಭವಾಗುತ್ತದೆ. ಶಾಲೆ ಪ್ರಾರಂಭಿಸಿದ ಮೊದಲಲ್ಲಿ ಎಂಟು ಜನ ಹೆಣ್ಣು ಮಕ್ಕಳು ಮಾತ್ರ ಪ್ರವೇಶವನ್ನು ಪಡೆದುಕೊಂಡಿದ್ದರು. ನಂತರದ ದಿನದಲ್ಲಿ ನಲವತ್ತೇಂಟು ಜನರಿಂದ ಶಾಲೆ ಕಂಗೊಳಿಸಹತ್ತಿತ್ತು. ಅದೇ ಶಾಲೆಗೆ ಸಾವಿತ್ರಿಬಾಯಿ ಫುಲೆಯವರನ್ನು ಮುಖ್ಯ ಶಿಕ್ಷಕಿಯನ್ನಾಗಿ ನೇಮಿಸಿಕೊಳ್ಳಲಾಯಿತು. ನಿರಂತರವಾಗಿ ಶಾಲೆಯ ಅಭಿವೃದ್ಧಿಗಾಗಿ ಹಗಲಿರುಳು ದುಡಿದು ಶೈಕಣಿಕವಾಣಿ ಉತ್ತಮ ಪ್ರಗತಿಯನ್ನು ಸಾಧಿಸಲು ಸಫಲತೆಯನ್ನು ಪಡೆಯಿತು. ಆ ಶಾಲೆಗೆ ಬರುವವರೆಲ್ಲರೂ ಕಡು ಬಡತನದಲ್ಲಿ ಇದ್ದ ಹೆಣ್ಣು ಮಕ್ಕಳು.ಶೂದ್ರರು ದಮನಿತರು. ಇತಂಹ ಪರಿಸ್ಥಿತಿಯಲ್ಲಿ ಶಾಲೆಗೆ ದುಡ್ಡು ಖರ್ಚು ಮಾಡುವದು ಹರಸಾಹಸವೇ ಆಗಿತ್ತು. ಅದನ್ನು ಅರಿತ ಫುಲೆ ದಂಪತಿಗಳು ಹೆಣ್ಣು ಮಕ್ಕಳಿಗೆ ಊಟ,ಸಮವಸ್ತç, ಆಟಕ್ಕೆ ಬೇಕಾದ ಸಾಮಿಗ್ರಿಗಳ ವ್ಯವಸ್ಥೆಯನ್ನು ಮಾಡಿದರು. ಅಲ್ಲದೆ ಮಕ್ಕಳನ್ನು ಮನೆಯಿಂದ ಶಾಲೆಗೆ ಕರೆದುಕೊಂಡುಬರಲು ಮತ್ತು ಮತ್ತೇ ಮರಳಿ ಮನೆಗೆ ಕಳಿಸಲು ಸರಿಯಾದ ವ್ಯವಸ್ಥೆಯನ್ನು ಮಾಡಿದರು. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಕಲಿಯಲು ಸಹಾಯವಾಯಿತು.  ಶೂದ್ರರು ಶಾಲೆಗೆ ಹೋಗಿ ಅಕ್ಷರ ಜ್ಞಾನ ಪಡೆದು ಕೊಳ್ಳುವುದನ್ನು ಸಹಿಸದ ಕೆಲ ಜಾತಿವಾದಿ ಪುಣಿಯ ಬ್ರಾಹ್ಮಣರು ವಿರೋಧಿಸಿದರು. ಜ್ಯೋತಿಬಾ ಫುಲೆ ಅವರಿಗೆ ಬೇದರಿಕೆಗಳನ್ನು ಹಾಕಿದರು ಆದರೆ ಇಂತಹ ಗೊಡ್ಡು ಬೇದರಿಕೆಗೆ ಹೆದರದೆ ತಮ್ಮ ಗುರಿ ಮತ್ತು ಉದ್ದೇಶವನ್ನು ಫುಲೆಯವರು ಬಿಡಲಿಲ್ಲ. ಒಂದು ಕ್ಷಣ ಇಂದಿನ ಪರಿಸ್ಥಿತಿಯಲ್ಲಿ ನಾವು ನೋಡಿದರೆ ಅಂದು ಫುಲೆ ಅವರು ತಾವು ಮಾಡುವ ಕೆಲಸದಿಂದ ಒಂದು ಹೆಜ್ಜೆ ಹಿಂದೆ ಸರಿದಿದ್ದರೆ ಎಲ್ಲ ಹೆಣ್ಣು ಮಕ್ಕಳ ಪರಿಸ್ಥಿತಿ ಏನಾಗುತ್ತಿತ್ತು ಎಂದು ವಿಚಾರಿಸಿದರೆ ಮೈಯೆಲ್ಲ ನಡುಕ ಹುಟ್ಟುತ್ತದೆ. ಪರಿಸ್ಥಿತಿ ತುಂಬಾ ಹದಗೆಟ್ಟು ಕಲಿಸಲು ಬಂದ ಶಿಕ್ಷಕರನ್ನು ಕೂಡಾ ಬೆದರಿಸಿ ಹೆದರಿಸಿ ಅವರನ್ನು ಶಾಲೆಗೆ ಬರದಂತೆ ಮಾಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸಾವಿತ್ರಿಬಾಯಿಯವರನ್ನೇ ಮನೆಯಲ್ಲಿಯೇ ಪಾಠ ಮಾಡಲು ನೇಮಿಸಿಕೊಳ್ಳುತ್ತಾರೆ. ಇದನ್ನು ಅರಿತ ಇಡೀ ಪುಣಿ ತಲ್ಲಣಕ್ಕೆ ಇಡಾಗುತ್ತದೆ. ಮಹಿಳೆಯಾದವಳು ಮನೆಯಿಂದ ಹೊರಹೋಗಿ ಶಿಕ್ಷಕಿಯಾಗಿ ಕೆಲಸ ಮಾಡುವುದು ಮಹಾ ಅಪರಾಧವೆಂಬAತೆ ಸಂಪ್ರದಾಯಸ್ಥರೆಲ್ಲರೂ ವಿರೋದ ವ್ಯಕ್ತಪಡಿಸುತ್ತಾರೆ. ಇದು ರಾಷ್ಟಿçÃಯ ಗೌರವಕ್ಕೆ ಮಾಡಿದ ಅಪಮಾನವೆಂದು, ಇಂತಹ ಕೆಲಸ ಅಪವಿತ್ರವೆಂದು ಬ್ರಾಹ್ಮಣರು ಸಾವಿತ್ರಿಬಾಯಿಯವರು ಶಾಲೆಗೆ ಹೋಗುವಾಗ ಅವರ ಮೇಲೆ ಮಣ್ಣು, ಸೆಗಣಿಯನ್ನು ಎಸೆಯುತ್ತಾರೆ ದೃತಿಗೆಡದ ಸಾವಿತ್ರಿಬಾಯಿ ಅವರು “ದೇವರು ನಿಮಗೆ ಒಳ್ಳೆಯದು ಮಾಡಲಿ, ಅವನು ನಿಮ್ಮನ್ನು ಕ್ಷಮಿಸಲಿ, ನನ್ನ ಕರ್ತವ್ಯವನ್ನು ನಾನು ನಿರ್ವಹಿಸುತ್ತಿದ್ದೇನೆ” ಎಂದು ಸಾವಿತ್ರಿಬಾಯಿಯವರು ತಮ್ಮ ಮೇಲೆ ಸೆಗಣಿ ಎಸೆದವರಿಗೆ ಒಳ್ಳೆಯದಾಗಲಿ ಎಂದು ದೇವರನ್ನು ಪ್ರಾರ್ಥಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸಾವಿತ್ರಿಬಾಯಿ ಅವರು ಶಾಲೆಗೆ ಹೋಗುವಾಗ ತಮ್ಮ ಕೈಯಲ್ಲಿ ಒಂದು ಸೀರೆಯನ್ನು ಹಿಡಿದುಕೊಂಡು ಹೋಗುತ್ತಿದ್ದರು ಶಾಲೆ ಪ್ರವೇಶಿಸಿದ ನಂತರ ಸೆಗÀಣಿಯ ಸೀರೆಯನ್ನು ಕಳಚಿ ಕೈಯಲ್ಲಿ ತಂದ ಮತ್ತೋಂದು ಸೀರೆಯನ್ನು ಊಡುತ್ತಿದ್ದರು. ಯಾವದಕ್ಕೂ ತಲೆ ಕೆಡಿಸಿಕೊಳ್ಳದೆ ತಮ್ಮ ಪತಿಯ ಸಹಾಯದಿಂದ ಕೆಲಸದಲ್ಲಿ ನಿರತರಾಗುತ್ತಾರೆ. ಸಾವಿತ್ರಿಬಾಯಿಯವರು ಸ್ತ್ರೀಯರ ಸುಧಾರಣಿಗಾಗಿ ಜ್ಯೋತಿರಾವರ ಮಾರ್ಗದರ್ಶನದಲ್ಲಿ “ಮಹಿಳಾ ಸೇವಾ ಮಂಡಳ”ವನ್ನು ಸ್ಥಾಪನೆ ಮಾಡುತ್ತಾರೆ. ಪುಣಿಯ ಕಲೆಕ್ಟರ್ ಅವರ ಪತ್ನಿ ಇ.ಸಿ.ಜೋನ್ಸ ಎಂಬುವರು ಮಹಿಳಾ ಸೇವಾ ಮಂಡಳ ಸಂಸ್ಥೆಯ ಅಧ್ಯಕ್ಷರಾಗುತ್ತಾರೆ. ಮಹಿಳೆಯರನ್ನೆಲ್ಲಾ ಒಟ್ಟು ಗೂಡಿಸಲು ೧೮೫೨ ರಲ್ಲಿ ದೊಡ್ಡ ಪ್ರಮಾಣದ ಎಳ್ಳುಬೆಲ್ಲ ಹಂಚುವ ಕಾರ್ಯಕ್ರಮ ಹಮ್ಮಿಕೊಂಡು ಎಲ್ಲ ಹೆಣ್ಣು ಮಕ್ಕಳಿಗೆ ಕುಂಕುಮವನ್ನು ವಿತರಿಸಿ ಅವರಿಗೆಲ್ಲ ಊಡಿಯನ್ನು ತುಂಬುತ್ತಾರೆ. ೧೮೭೧ ರಲ್ಲಿ ಸ್ತ್ರೀ ವಿಚಾರವತಿ’ ಸಭಾ ಸ್ಥಾಪನೆ ಮಾಡುತ್ತಾರೆ. ಆ ಕಾಲದಲ್ಲಿ ಬ್ರಾಹ್ಮಣ ಸ್ತ್ರೀಯರಿಗೆ ಹೆಚ್ಚಿನ ತೊಂದರೆ ಇತ್ತು. ಅದರಲ್ಲಿ ವಿಧವೆಯರಾದರೆ ಅನೇಕ ಬ್ರಾಹ್ಮಣ ಮನೆತನದ ಮಾವ, ಮೈದುನ ಮುಂತಾದವರು ಅವರ ಮೇಲೆ ಬಲಾತ್ಕಾರ ಮಾಡುತ್ತಿದ್ದರು. ಲೈಂಗಿಕ ಶೋಷಣೆ ಮಾಡುತ್ತಿದ್ದರು. ಇದರ ಪರಿಣಾಮವಾಗಿ ಅವರಿಗೆ ಮಕ್ಕಳಾದರೆ ‘ಬಾಲ ಹತ್ಯೆ’ ಮಾಡುತ್ತಿದ್ದರು. ಇಲ್ಲವೇ ಗರ್ಭವತಿಯಾದರೆ ಸ್ವತಃ ಅವರೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಇವೆಲ್ಲವನ್ನೂ ತಡೆಗಟ್ಟುವ ಉದ್ದೇಶದಿಂದ ಜ್ಯೋತಿಭಾರವರು ‘ಬಾಲಹತ್ಯಾ ಪ್ರತಿಬಂಧಕ ಗೃಹ’ ಸ್ಥಾಪಿಸಿದರು. ತರುಣ ಬ್ರಾಹ್ಮಣ ವಿಧವೆಯರಿಗೆ ಈ ಗೃಹ ದೊಡ್ಡ ಆಧಾರವಾಗಿತ್ತು. ೧೮೬೩ರಲ್ಲಿ ಸ್ವಂತ ಮನೆಯಲ್ಲಿ ಸ್ಥಾಪಿಸಿದ ಅನಾಥ ಬಾಲಶ್ರಮವನ್ನು ಸಾವಿತ್ರಿಯವರು ೩೫ ಜನರಿಗೆ ಬಾಣಂತನವನ್ನು ಮಾಡಿದರು. ಸವರ್ಣೀಯ ವಿಧವೆಯರು ಅವರ ಸೇವೆ ಮಾಡುವಾಗ ಸಾವಿತ್ರಿಭಾಯಿಯವರಿಗೆ ಅದು ಎಂದು ಕೀಳಾಗಿ ತೋರಲಿಲ್ಲ. ೧೮೭೩ರಲ್ಲಿ ಕಾಶೀಬಾಯಿ ಎಂಬ ಬ್ರಾಹ್ಮಣ ವಿಧವೆಯ ಇಂತಹದೇ ಸಂಬಂಧದಿಂದ ಹುಟ್ಟಿದ ಮಗನನ್ನು ಜ್ಯೋತಿಬಾಪುಲೆ ಮತ್ತು ಸಾವಿತ್ರಿಬಾಯಿಪುಲೆ ದತ್ತು ತೆಗೆದುಕೊಳ್ಳುತ್ತಾರೆ. ಆ ಮಗುವಿಗೆ ಯಶವಂತ ಅಂತಾ ನಾಮಕರಣ ಮಾಡುತ್ತಾರೆ. ಅನನ್ನು ಎಂ.ಬಿ.ಬಿ.ಎಸ್ ಓದಿಸಿ ಡಾಕ್ಟರರನ್ನಾಗಿ ಮಾಡುತ್ತಾರೆ.ಹೀಗೆ ಮಹಿಳೆಯರಿಗಾಗಿ ವಿಧವೆಯರ ಪುನರ್ವಸತಿ, ವಿಧವಾ ಅನಾಥಾಶ್ರಮವನ್ನು ಕೂಡಾ ಸ್ಥಾಪಿಸುತ್ತಾರೆ. ಪುಲೆಯವರು ಸ್ಥಾಪಿಸಿದ್ದ ವಿಧವಾ ಅನಾಥಾಲಯವು ದೇಶದಲ್ಲಿಯೇ ಸ್ಥಾಪಿಸಿದ ಪ್ರಥಮ ಸಾಮಾಜಿಕ ಸಂಸ್ಥೆಯಾಗಿದ್ದಿತು. ೧೮೬೮ರಲ್ಲಿ ತಮ್ಮ ‘ನೀರಿನಬಾವಿ’ಯನ್ನು ಕೆಳಜಾತಿಗಳಿಗೆ ಮುಕ್ತಗೊಳಿಸಿ ಬಿಡುತ್ತಾರೆ. ಇದರಿಂದ ಎಷ್ಟೋ ಕೆಳವರ್ಗದವರಿಗೆ ನೀರು ಸಿಕ್ಕಂತಾಗುತ್ತದೆ. ಶಿಕ್ಷಣ ನೀಡುವ ದಾಹವು ಪುಲೆಯವರು ವಯಸ್ಕ ರೈತರು  ಮತ್ತು ದುಡಿಯುವವರಿಗಾಗಿ ರಾತ್ರಿ ಶಾಲೆಯನ್ನು ಪ್ರಾರಂಭಿಸುವAತೆ ಮಾಡಿತು. ತಮ್ಮ ಮನೆಯಲ್ಲಿ ರಾತ್ರಿ ಶಾಲೆಯನ್ನು ಪ್ರಾರಂಭಿಸಿ ಪ್ರತಿದಿವಸ ೨ ಗಂಟೆಗಳ ಕಾಲ ತಾವು ಮತ್ತು ತಮ್ಮ ಪತ್ನಿ ಸಾವಿತ್ರಿಬಾಯಿ ಪುಲೆಯವರು ‘ಅಶಿಕ್ಷಿತ ವಯಸ್ಕ, ರೈತರರಿಗೆ ಶಿಕ್ಷಣವನ್ನು ನೀಡುತ್ತಿದ್ದರು. ನಿರಂತರ ಹೋರಾಟದಿಂದ ೭೩ ವರ್ಷದ ಮಹಾತ್ಮ ಜ್ಯೋತಿಬಾಪುಲೆಯವರು ಧೀರ್ಘ ಅನಾರೋಗ್ಯದಿಂದ ೧೮೯೦ರಲ್ಲಿ ನವೆಂಬರ್ ೨೮ರಂದು ನಿಧನರಾದರು. ಮಕ್ಕಳಾಗದ ದಂಪತಿಗಳಾಗಿದ್ದರಿAದ ದತ್ತು ಪುತ್ರ ಯಶವಂತನಿಗೆ ಸಂಸ್ಕಾರ ಮಾಡಲು ಕುಟುಂಬದವರು ಒಪ್ಪದೇ ಇದ್ದಾಗ ಸ್ವತಃ ಕೈಯಲ್ಲಿ ದಿವಟಿಯನ್ನು ಹಿಡಿದು ಜ್ಯೋತಿಯವರ ಅಂತ್ಯ ಸಂಸ್ಕಾರ ಮಾಡಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಪುಲೆ. ಹಾಗೇ ಅವರು ತಮ್ಮ ಇಡೀ ಜೀವನದ ಉದ್ದಕ್ಕೂ ಹೆಣ್ಣುಮಕ್ಕಳಿಗಾಗಿ ಮತ್ತು ಅಶ್ಪೃಶ್ಯರಿಗಾಗಿ ಶಾಲೆ ಪ್ರಾರಂಭಿಸಿದರು. ಬಾಲಹತ್ಯಾ ಪ್ರತಿಬಂಧಕ ವಿಧವಾ ಅನಾಥಾಶ್ರಮ, ಕೂಲಿಕಾರ ರೈತರಿಗಾಗಿ ರಾತ್ರಿಶಾಲೆ, ಬಡವರಿಗಾಗಿ ಅನ್ನಛತ್ರಗಳನ್ನು ತೆರೆದರು. ಬ್ರಾಹ್ಮಣ ವಿಧವೆಯರ ತಲೆಬೋಳಿಸುವುದನ್ನು ವಿರೋಧಿಸಿದರು. ದೇವದಾಸಿ ಪದ್ಧತಿ ನಿರ್ಮೂಲನೆ ಮಾಡುವ ಪ್ರಯತ್ನದಲ್ಲಿ ತೋಡಗಿದರು. ಹೀಗೆ ಎಲ್ಲ ರೀತಿಯ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮೊದಲ ಮಹಿಳೆ ಸಾವಿತ್ರಿಬಾಫುಲೆ ಎಂದರೆ ತಪ್ಪಾಗಲಾರದು. ಒಟ್ಟಾರೆಯಾಗಿ ಸಮಾಜದ ಎಲ್ಲ ಅನಿಷ್ಟಗಳಿಗೂ ಕಾರಣವಾದ ಜಾತಿಪದ್ಧತಿ ಅಳಿಯಬೇಕೆಂದು ಜಾಲ್ತಿಯಲ್ಲಿದ್ದ ಬಹುಪಾಲು ವ್ಯವಸ್ಥೆ ಆಚರಣೆ ನಂಬಿಕೆಗಳಿಗೆ ಸವಾಲೆಸೆದರು. ಶಿಕ್ಷಣ ಎಲ್ಲರ ಹಕ್ಕು ಎಂದು ಸಾರಿ ಶಾಲೆಯನ್ನು ತೆರೆದರು ಪುರೋಹಿತರಿಲ್ಲದೆ ಮದುವೆ ಮಾಡಿಸಿದರು. ಬಹುಪತ್ನಿತ್ವವನ್ನು ವಿರೋಧಿಸಿದರು. ವಿಧವೆಯರ ಮಾನವ ಹಕ್ಕುಗಳ ಎತ್ತಿ ಹಿಡಿದು ಮರು ವಿವಾಹವನ್ನು ಪ್ರತಿಪಾದಿಸಿದರು. ಸತ್ಯಶೋಧಕ ಸಮಾಜ ಕಟ್ಟಿದರು. ತಮಗೆ ತಿಳಿದಂತೆ ಕವಿತೆಗಳನ್ನು ಬರೆದರು. ಎಲ್ಲ ಧರ್ಮಗಳ ಶಾಸ್ತç-ಪುರಾಣ-ಗ್ರಂಥಗಳ ನಿರಾಕರಿಸಿ ಸಾರ್ವಜನಿಕ ಸತ್ಯ ಧರ್ಮ ಪ್ರತಿಪಾದಿಸಿ ಹೊಸ ಹೊಸ ಗ್ರಂಥಗಳನ್ನು ರಚಿಸಿ ಓದುಗರ ಮನಸ್ಸನ್ನು ಸೋರೆಗೊಂಡ ಮಹಾನ್ ಕ್ರಾಂತಿಕಾರಿ ತಾಯಿಯಾಗಿ ನಮಗೆಲ್ಲ ಮಾರ್ಗದಾತೆಯಾದವರು. ಇಂತಹ ಮಾತೆ ಸಾವಿತ್ರಿಬಾಯಿಯವರ ಕಲಿಸಿದ ಪಾಠದ ಪರಿಣಾಮವಾಗಿ ಹದಿನಾಲ್ಕು ವರ್ಷದ ‘ಮುಕ್ತಾ’ ಎಂಬ ಹುಡಗಿ ೧೫ನೇ ಫೆಬ್ರುವರಿ ೧೮೫೫ ರಿಂದ ೯ ಮಾರ್ಚ ೧೮೫೫ ರ ಜ್ಞಾನೋದಯ ಎಂಬ ಪತ್ರಿಕೆಯ ಅಂಕಣದಲ್ಲಿ ‘ಹೊಲೆಯ ಮಾದಿಗರ ದುಖಃಗಳು’ ಎಂಬ ಪ್ರಬಂಧ ಪ್ರಕಟವಾಗುತ್ತದೆ. ಇದೆಲ್ಲದರ ಪರಿಣಾಮವಾಗಿ  ಅವರು ಕಟ್ಟಿದ ಕನಸು ನನಸಾಗಲು ಬಹಳ ಸಮಯ ಹಿಡಿಯುವದಿಲ್ಲ. ೧೮೪೮ ರಿಂದ ೧೮೫೨ರ ಅವಧಿಗೆ ೧೮ ಶಾಲೆಗಳನ್ನು ತೆರೆಯುತ್ತಾರೆ. ಇದರಿಂದ ನಮಗೆಲ್ಲಾ ತಿಳಿದು ಬರುವ

ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ Read Post »

ನಿಮ್ಮೊಂದಿಗೆ

ರಿಂಗಣ

ಕವಿತೆ ರಿಂಗಣ ನೀ. ಶ್ರೀಶೈಲ ಹುಲ್ಲೂರು ವಿರಮಿಸದ ಮನವೆ ನೀನುರಮಿಸಬೇಡ ಹೀಗೆ ನನ್ನಕೆನ್ನೆ ತಟ್ಟಿ ತುಟಿಯ ಮುಟ್ಟಿಹೇಳಬೇಡ ‘ನೀನೆ ಚೆನ್ನ’ ಏಕೆ ಹೀಗೆ ಲಲ್ಲೆಗರೆವೆ ?ಮೆಲು ದನಿಯಲಿ ನನ್ನ ಕರೆವೆನಿನ್ನ ಬಳಿಗೆ ಬರುವೆ ನಾನುಒಲವ ತೋರಿ ನನ್ನೆ ಮರೆವೆ ಬಾನ ದಾರಿಗುಂಟ ನಡೆವೆನಿನ್ನ ತೋಳ ಮೇಳದಲ್ಲಿಚಂದ್ರ ತಾರೆ ಹಿಡಿದು ತರುವೆಕಣ್ಣ ಬಿಂಬದಾಳದಲ್ಲಿ ನಭಕು ನೆಲಕು ಸೆರಗ ಹಾಸಿಚುಕ್ಕಿ ಚಿತ್ರ ಬರೆವೆ ನಾನುನನ್ನ ಅಂದ ಕಂಡು ಹಿಗ್ಗಿಹೊತ್ತು ಒಯ್ವೆ ನನ್ನ ನೀನು ಹೀಗೆ ಇರಲಿ ನಮ್ಮ ಒಲವುಸುರಿಸುತಿರಲಿ ಜೇನು ಮಾವುಸವಿದು ಕುಣಿದು ತಣಿದು ಚಣದಿಬೀಗಿ ನೀಗಲೆಮ್ಮ ನೋವು ***********************************

ರಿಂಗಣ Read Post »

ನಿಮ್ಮೊಂದಿಗೆ

ಗಜಲ್

ಗಜಲ್ ಸ್ಮಿತಾ ಭಟ್ ಬೇಕೋ ಬೇಡವೋ ಈ ಬದುಕನ್ನು ನಡೆದೇ ಮುಗಿಸಬೇಕಿದೆ.ಕಾಲದ ಕಡುದಾರಿಯ ಕಳವಳಿಸದೇ ಮುಗಿಸಬೇಕಿದೆ ಉಯ್ಯಾಲೆ ಕಟ್ಟಿದ ರೆಂಬೆಯ ಮೇಲೆ ಅದೆಷ್ಟು ನಂಬಿಕೆಎರಗುವ ನಸೀಬನ್ನು ಎದೆಗುಂದದೇ ಮುಗಿಸಬೇಕಿದೆ. ಸುತ್ತಿ ಬಳಸುವ ದಾರಿಯಲಿ ಕಾಲಕಸುವು ಕಳೆಯದೇ ಇರದುಸಿಗದ ನೂರು ಬಯಕೆ ಕನಸನು ಕೊರಗದೇ ಮುಗಿಸಬೇಕಿದೆ. ಮೋಡ ಎಲ್ಲವನ್ನೂ ಶೂನ್ಯಗೊಳಿಸುವುದು ಕೆಲವೊಮ್ಮೆಮೆತ್ತಿಕೊಳ್ಳುವ ನೋವನು ಅಳುಕದೇ ಮುಗಿಸಬೇಕಿದೆ. ಹಿಂತಿರುಗಿದಾಗ ಎಷ್ಟೊಂದು ಏರಿಳಿತಗಳು ಬದುಕಿಗೆಯಾವ ಕಹಿಯನೂ ಉಳಿಸಿಕೊಳ್ಳದೇ ಮುಗಿಸಬೇಕಿದೆ. ರೆಕ್ಕೆ ಕಟ್ಟಿಕೊಂಡಾಗ ಜಗವದೆಷ್ಟು ಸೋಜಿಗ “ಮಾಧವ”ಈ ಖುಷಿಗೆ ಯಾರ ಹಂಗು,ವಿಷಾದವಿರದೇ ಮುಗಿಸಬೇಕಿದೆ *******************************

ಗಜಲ್ Read Post »

ನಿಮ್ಮೊಂದಿಗೆ

ಶರದದ ಹಗಲಲ್ಲಿ ಆಷಾಢದ ಮೋಡಗಳು…

ಶರದದ ಹಗಲಲ್ಲಿ ಆಷಾಢದ ಮೋಡಗಳು… ಎಂ.ಆರ್.ಕಮಲ ಹೊರಗಿನ ಋತುಮಾನಕ್ಕೂ ಒಳಗಿನ ಋತುಮಾನಕ್ಕೂ ಸಂಬಂಧವಿದೆಯೇ ಎಂದು ಹಲವಷ್ಟು ಬಾರಿ ಯೋಚಿಸಿದ್ದೇನೆ. ಇದೆ ಎನ್ನುವುದು ನಿಜವಾದರೂ ಪೂರ್ಣಸತ್ಯವಲ್ಲ. ಬಯಲು ಸೀಮೆಯ ಬಿರುಬಿಸಿಲಲ್ಲಿ ಬೆಳೆದ ನನ್ನಂಥವರು ಬಾಯಿಯಲ್ಲಿ ಕೆಂಡವನ್ನೇ ಕಾರುತ್ತೇವೆ. ವಿನಾಕಾರಣ ಉದ್ವಿಗ್ನಗೊಂಡು. ಸಣ್ಣ ಸಣ್ಣ ವಿಷಯಕ್ಕೆಲ್ಲ ಜಗಳ ತೆಗೆಯುತ್ತೇವೆ. ಬಯಲು ಸೀಮೆಯ ಹೆಚ್ಚಿನ ಜನರ ಬೆಳಗುಗಳು ಗುದ್ದಾಟಗಳಿಂದಲೇ  ಆರಂಭವಾಗುತ್ತದೆ. ವಸಂತನೇ ಬರಲಿ, ಗಿಡಮರಗಳು ಚಿಗುರುತ್ತಲೇ ಇರಲಿ, ಹೂವುಗಳು ತೂಗುತ್ತಲೇ ಇರಲಿ ಬೇಸಗೆಯ ಬಿರುಬಿಸಿಲಂಥ ಚಡಪಡಿಕೆ ಮಾತ್ರ ನಿಲ್ಲುವುದೇ ಇಲ್ಲ. ಆಷಾಢದ ಮೋಡ ಕವಿದ ವಾತಾವರಣ ಯಾರ ಎದೆಯಲ್ಲಿ ದುಗುಡ ಮೂಡಿಸುವುದಿಲ್ಲ ಹೇಳಿ? ಮಳೆ ಸುರಿಸುವುದು ಅಷ್ಟರಲ್ಲೇ ಇದ್ದರೂ ಮೋಡಗಳು ಮಾತ್ರ ದಟ್ಟೈಸುತ್ತಲೇ ಇರುತ್ತವೆ. ಈ ಕವಿದ ಮೋಡಗಳು, ಹಗಲಲ್ಲಿಯೇ ಕಾರ್ಗತ್ತಲನ್ನು ಸೃಷ್ಟಿಸಿ ಮನಸ್ಸಿಗೆ ಮಂಕು ಕವಿಸಿಬಿಡುತ್ತವೆ. ಭೋರೆಂದು ಬೀಸುವ ಗಾಳಿ ಕ್ಷಣಾರ್ಧದಲ್ಲಿ ಎಲ್ಲವನ್ನು ಚದುರಿಸುವಂತೆ ಕಂಡರೂ ಕಪ್ಪಿಟ್ಟ ಮನಸ್ಸು ಹೊಳವಾಗುವುದಿಲ್ಲ. ಇತ್ತ ವೈಶಾಖದ ಬೇಸಗೆಯ ಧಗೆ, ಅತ್ತ ಶ್ರಾವಣದ ಸಂತಸ ಎರಡನ್ನೂ ಹೊತ್ತು ವಿಚಿತ್ರ ತಳಮಳವನ್ನು ಒಳಗೂ ಹೊರಗೂ ಸೃಷ್ಟಿಸಿಬಿಡುತ್ತದೆ. ಹಾಡು ಹಗಲೇ ರವಿ ಕಾಣದಂತೆ ಮಾಡುವ ಶ್ರಾವಣದ ಮೋಡಗಳು ಸುರಿಸುವ ಮಳೆಯಿಂದಾಗಿ ಒಳಗೆ ತುಂಬಿದ್ದ ಕೊಳೆ ಕಶ್ಮಲಗಳು ತೊಡೆದು ಬದುಕಿಗೆಂಥ ಹುರುಪು ಹುಟ್ಟುತ್ತದೆ. ಸುತ್ತಲಿನ ಹಸಿರು, ಒಳಮನವನ್ನು ಚಿಗುರಿಸುತ್ತ ಹೋಗುತ್ತದೆ. ಶರದೃತುವಿನ ಬೆಳಗಿನ ತಿಳಿಆಗಸ ಮನಸ್ಸನ್ನು ಹಗುರಗೊಳಿಸುತ್ತ  ಹೋದರೆ, ಹೇಮಂತದ ಸಂಜೆಗಳು ನೀರವವಾಗುತ್ತ, ಒಂಟಿತನದ ನೋವನ್ನು ದ್ವಿಗುಣಗೊಳಿಸುತ್ತದೆ. ಎಲೆ ಕಳಚುವಂತೆ ಮಾಡುವ ಶಿಶಿರನ ಹೆಜ್ಜೆಗಳು ಬದುಕಿನ ನಶ್ವರತೆಯನ್ನು ಎದೆಗೆ ತುಂಬಿ ಕಳವಳ ಹುಟ್ಟಿಸುತ್ತವೆ.. ಹೀಗಾಗಿಯೇ ಹವಾಮಾನಕ್ಕೆ ಅನುಗುಣವಾಗಿಯೇ ಹೆಚ್ಚಿನವರ ಸ್ವಭಾವಗಳು ರೂಪುಗೊಂಡಿರುತ್ತವೇನೋ ಎನ್ನುವ ಭಾವ ಮೂಡುವುದು. ಅದು ಹೆಚ್ಚಿನಂಶ ನಿಜವೂ ಹೌದು. ತಣ್ಣಗಿನ ಯೂರೋಪಿಯನ್ನರಿಗೂ ಕುಣಿತವೇ ಮೈವೆತ್ತ ಆಫ್ರಿಕನ್ನರಿಗೂ ಮತ್ತು ಮಲೆನಾಡಿನ ಜನಗಳ ಸೌಮ್ಯ ಸ್ವಭಾವಕ್ಕೂ ಬಯಲು ಸೀಮೆಯ ಜನರ ಉರಿಮಾರಿತನಕ್ಕೂ ಇರುವ ವ್ಯತ್ಯಾಸ ಗಮನಿಸಿದರೆ ಹೆಚ್ಚು ಅರ್ಥವಾಗುತ್ತದೆ. ಆದರಿದು ವಿಷಯದ ಹೊರಮೈ. ಅಂತರಂಗದಲ್ಲಿ ಎಲ್ಲರೂ ಕೊನೆಗೆ ಮನುಷ್ಯರೇ. ಮನುಷ್ಯನಿಗಿರುವ ಸ್ವಾರ್ಥ, ಕ್ರೌರ್ಯ, ಒಳ್ಳೆಯತನ ಇತ್ಯಾದಿಗಳು ಉಷ್ಣ, ಶೀತ, ಸಮಶೀತೋಷ್ಣ ಹೀಗೆ ಯಾವ ವಲಯದಲ್ಲಿದ್ದರೂ ಇದ್ದೇ  ಇರುತ್ತವೆ. ಹೊರಗಿನ ವಾತಾವರಣಕ್ಕೆ ಹೊಂದಿಕೊಂಡಂತೆ ನಮ್ಮ ಪ್ರತಿಕ್ರಿಯೆ ಇರುವುದು ಕೂಡ ‘Danger of a single story ‘ ಅನ್ನಿಸುತ್ತದೆ. ಮನುಷ್ಯನ ಮನಸ್ಸು ಇವೆಲ್ಲವನ್ನೂ ಮೀರಿ ವರ್ತಿಸುವುದುಂಟು. ನಾನು ಓದಿದ ಪುತಿನ ಅವರ ಒಂದು ಕವಿತೆ ನನಗಿದಕ್ಕೆ ಸಮರ್ಥನೆ ಒದಗಿಸಿತು. ಅದೊಂದು ಶರದೃತುವಿನ ಬೆಳಗು. ಬಾನು ತಿಳಿಯಾಗಿದೆ. ಬಿಳಿಮುಗಿಲಿನ ದೋಣಿ ಆಕಾಶದಲ್ಲಿ ವಿಹಾರಕ್ಕೆ ಹೊರಟಿದೆ. ಕೊಳದ, ಬಯಲ, ಬೆಟ್ಟದ ಮೇಲೆಲ್ಲ ಬೆಚ್ಚನೆಯ ಕಿರುಬಿಸಿಲು ಒರಗಿಕೊಂಡಿದೆ. ಹಸಿರಿನ ಮೇಲಿರುವ ಹಿಮಮಣಿಗಳು ಮುತ್ತಿನ ಬಾಣಗಳನ್ನು ದಿಕ್ಕುದಿಕ್ಕಿಗೂ ಎಸೆದಿವೆ. ಆ ಶರದೃತುವಿನ ಹಗಲಲ್ಲಿ ಚೆಲುವಿದೆ, ಕಳೆಯಿದೆ, ಬಿಡುವಿದೆ. ಎಲೆಯ ಮೇಲುರುಳುತ್ತ , ಮುತ್ತಿನ ಕಂಠಿಯ ಕಮಲಕ್ಕೆ ಕಿರುದೆರೆಗಳು ಹಾರವನ್ನು ಹಾಕಿವೆ. ತಣ್ಣಗೆ ನುಣ್ಣಗೆ ಗಾಳಿ ನುಸುಳಿ ಬಳ್ಳಿಗೆ ಕಚಗುಳಿಯನ್ನು ನೀಡುತ್ತಿದೆ. ಪೆದರಿನಲ್ಲಿ, ಮೆಳೆಯಲ್ಲಿ, ವನದಲ್ಲಿ ಹಕ್ಕಿಯು ಹಾಡನ್ನು ಹರಡುತ್ತಿದೆ. ಅಂತ ಶರದದ ಹಗಲಲ್ಲಿ ಒಲವಿದೆ, ಗೆಲುವಿದೆ, ನಲವಿದೆ. ಆದರೆ ಕವಿಯ ಮನಸ್ಸು ಮಾತ್ರ ಒಲವಿನ ಪೂರ್ಣತೆಯನ್ನು ಅರಸುವ ದುಂಬಿಯಂತಿದೆ. ಚಿಂತೆಯ ಕಪ್ಪುಮೋಡದಲ್ಲಿ ಬೆಳಕನ್ನು ಕಾಣಲು ತವಕಿಸುತ್ತಿದೆ. ಬಾಳಿನ ಕನಸುಗಳಿಗೂ ಮತ್ತು ನನಸುಗಳಿಗೂ ಇರುವ ಅಪಾರ ಅಂತರವನ್ನು ನೆನೆದು ಉಲ್ಲಾಸ ಕುಗ್ಗಿ ಹೋಗುತ್ತಿದೆ. ಶರದೃತುವಿನ ಗೆಲುವಿನ ಹಗಲಲ್ಲಿ ನಲವಿನ ಸಂದೇಶವಿದ್ದರೆ ವಿಚಿತ್ರ ಎನ್ನುವಂತೆ ಬಾಳಿನ ನಲವನ್ನು ನೀಡುತ್ತಿರುವ ಸಂದೇಶವೇ ಮನಸ್ಸನ್ನು ಕುಗ್ಗಿಸುತ್ತಿದೆ.ಪೂರ್ಣತೆಯನ್ನು ಅರಸುತ್ತ ನವೆಯುವವರ ಕತೆಯೆಲ್ಲ ಹೀಗೆಯೋ ಏನೋ. ಯಾವುದನ್ನು ಕಂಡರೂ ಅಲ್ಲೊಂದು ಕೊರತೆಯಿದ್ದಂತೆ ಭಾಸವಾಗುತ್ತಿರುತ್ತದೆ. ಸಂಪೂರ್ಣವಾಗಿ ಯಾವುದರಲ್ಲೂ ತೊಡಗಿಕೊಳ್ಳಲಾಗದ, ಮತ್ತೇನನ್ನೋ ಬಯಸುವ ಮನಸ್ಸದು. ಅದಕ್ಕೆ ಹೊರಗಿನ ಚಳಿ, ಗಾಳಿ, ಮಳೆ ಯಾವುದೂ ಪರಿಣಾಮ ಬೀರಲಾರದು. ಋತುಮಾನಗಳನ್ನು ಧಿಕ್ಕರಿಸಿ ಏನನ್ನೋ ಅರಸಿ ಹಿಮಾಲಯದ ಗುಹೆಯೊಳಗೆ ತಪಸ್ಸಿಗೆ ಕೂರುವವರ ಮನಃಸ್ಥಿತಿಯದು. ನಮಗೆಲ್ಲ ಅನೇಕ ಬಾರಿ ಹೀಗಾಗುತ್ತದೆ. ಎಲ್ಲರೂ ಹೊಗಳುವ, ನಾಟಕಕ್ಕೋ, ಚಲನಚಿತ್ರಕ್ಕೋ, ನೃತ್ಯಕ್ಕೋ ಹೋಗುತ್ತೇವೆ. ಸುತ್ತಲಿನವರು ಖುಷಿಯಿಂದ ಕುಣಿಯುತ್ತಿರುತ್ತಾರೆ. ನಮಗೆ  ಆ ದೃಶ್ಯ ಖುಷಿ ಕೊಟ್ಟಿರುವುದೇ ಇಲ್ಲ. ಸುತ್ತಲಿನವರು ನಗುತ್ತಿರುತ್ತಾರೆ. ನಾವು ಬೆಪ್ಪರಂತೆ ಸುಮ್ಮನೆ ಕುಳಿತಿರುತ್ತೇವೆ. ಯಾವುದೋ ವಿಷಯವನ್ನು ಗಹನವೆಂದು ಮಾತಾಡುತ್ತಿರುತ್ತಾರೆ. ನಮಗಲ್ಲಿ ಯಾವ ಗಹನತೆಯೂ ಕಾಣುವುದಿಲ್ಲ. ಹೊರಗಿನ ಲೋಕಕ್ಕೂ ನಮಗೂ ಏನೇನೂ ಸಂಬಂಧವಿಲ್ಲದವರಂತೆ ಇದ್ದುಬಿಡುತ್ತೇವೆ. ಅನೇಕ ಬಾರಿ ವಿದ್ಯಾರ್ಥಿಗಳ ಜೊತೆ ಪ್ರವಾಸ ಹೋದಾಗ ನನಗೆ ಈ ಅನುಭವವಾಗಿದೆ. ಅವರ ಉನ್ಮತ್ತ, ಖುಷಿಯ, ಕುಣಿವ ವಾತಾವರಣಕ್ಕೂ ನನಗೂ ಸಂಬಂಧವಿಲ್ಲವೇನೋ ಎನ್ನುವಂತೆ, ಆ ಜಗತ್ತಿನಿಂದ ನನ್ನನ್ನು ಬೇರೆ ಎಲ್ಲೋ ಇಟ್ಟಂತೆ ಭಾಸವಾಗಿರುತ್ತದೆ. ಆದರದನ್ನು ತೋರ್ಪಡಿಸಿಕೊಳ್ಳಲಾಗಿಲ್ಲ. ಹಾಗೆ ಮಾಡಿದರೆ ಬೇರೊಬ್ಬರ ಸಂತೋಷವನ್ನು ಹಾಳು ಮಾಡಿದಂತಾಗಿಬಿಡುತ್ತದಲ್ಲ. ವಸಂತ ಋತುವಿನಲ್ಲಿ ಶಿಶಿರ ಗಾನ ಹಾಡಿದಂತಾಗುವುದಲ್ಲ! ಈ ರೀತಿ ನರಳುವುದರಲ್ಲೂ ಮನುಷ್ಯನಿಗೆ ಎಂಥದ್ದೋ ಖುಷಿಯಿರಬೇಕು! ಇಲ್ಲದಿದ್ದರೆ ಹಾಗೇಕೆ ವರ್ತಿಸುತ್ತಾನೆ ಎಂದುಕೊಂಡದ್ದಿದೆ. ಈ ಕಾರಣಕ್ಕಾಗಿಯೇ ಯಾವುದೇ ಬೀಸು ಹೇಳಿಕೆಗಳನ್ನು ಯಾವ ವಿಷಯದ ಬಗ್ಗೆಯೂ ಒಪ್ಪಲಾಗುವುದೇ ಇಲ್ಲ. ಪ್ರತಿಯೊಂದು ವಿಷಯಕ್ಕೆ ಅನೇಕ ಮುಖಗಳಿವೆ, ಸತ್ಯಗಳಿವೆ. ಒಬ್ಬರಿಗೆ ಅನುಭವಕ್ಕೆ ಬಂದದ್ದು ಮತ್ತೊಬ್ಬರಿಗೆ ಬರುವುದೇ ಇಲ್ಲ. ಬಂದರೂ ಉಳಿದವರಿಗೆ ಅರ್ಥವಾಗುವುದೇ ಇಲ್ಲ. ಆಷಾಢದಲ್ಲಿ ಮೋಡಗಳ ದುಗುಡ ಹೆಚ್ಚಿದಂತೆ ಎಲ್ಲರೂ ದುಗುಡಗೊಳ್ಳುತ್ತಾರೆ ಎನ್ನುವುದು ಕೂಡ ಮೂರ್ಖತನ. ಈ ಕಪ್ಪು ಮೋಡಗಳನ್ನು ಸೀಳಿದ ಬೆಳಕಿನ ಗೆರೆಗಳು ಎಲ್ಲೆಲ್ಲೋ ಕುಣಿಯುತ್ತಿರಬಹುದು! …… (ಕೊಳದ ಮೇಲಿನ ಗಾಳಿ ಪುಸ್ತಕದಿಂದ..ಆಯ್ದ ಬರಹ) *****************************************

ಶರದದ ಹಗಲಲ್ಲಿ ಆಷಾಢದ ಮೋಡಗಳು… Read Post »

ನಿಮ್ಮೊಂದಿಗೆ

ಗಜಲ್‌

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ ಕಣ್ಣ ಹನಿ ಜಾರುವ ಮುನ್ನ ಬೊಗಸೆಯೊಡ್ಡುವ ಭರವಸೆಯನ್ನು ಇತ್ತವನುನೀನಲ್ಲವೇ ಮುಚ್ಚಿಟ್ಟ ನೂರಾರು ಕನಸುಗಳಿಗೆಚಂದದ ಮರು ಜೀವವನ್ನುಇತ್ತವನುನೀನಲ್ಲವೇ – ಸಾಮಾನ್ಯಳಾದ ನನ್ನಲ್ಲಿ ಅಸಾಮಾನ್ಯಳೆಂಬ ಆತ್ಮ ವಿಶ್ವಾಸವನ್ನುತುಂಬಿದವನೇ ನೀನು ನಿನಗಾಗಿ ಏನಾದರೂ ಮಾಡಬಲ್ಲೆ ಎಂಬ ಭರವಸೆಯನ್ನು ಇತ್ತವನುನೀನಲ್ಲವೇ – ಸಾವಿರ ಹಸಿದ ಕಣ್ಣುಗಳ ನಡುವೆಯೂ ಪ್ರೇಮದ ಬೆಳಕು ಹೊತ್ತ ಕಣ್ಣಿನವನು ನೀನು ಎದೆಯ ಕತ್ತಲ ನೋವುಗಳನೆಲ್ಲಮರೆಸಿ ನಗುವಿನ ಮಿಂಚನ್ನುಇತ್ತವನುನೀನಲ್ಲವೇ – ಬರಿದೆಬಯಲಮರೀಚಿಕೆಯಂತಿದ್ದಭವಿತವ್ಯದಬದುಕಿನಲಿಹೊಂಗನಸತುಂಬಿದೆ ನೀನು ಸುಡುವ ಬೆಂಗಾಡಾಗಿದ್ದಮರುಭೂಮಿಯಲಿತಣ್ಣನೆಯನೆಳಲನ್ನುಇತ್ತವನುನೀನಲ್ಲವೇ – ನನ್ನೆದೆಯಕ್ಯಾನ್ವಾಸ್ ಮೇಲೆ ಬಣ್ಣ ಬಣ್ಣದ ಕಾಮನಬಿಲ್ಲನುಮೂಡಿಸಿದವನು ನೀನು ಶ್ರೀಯನೋವಿನ ಭಾವಗಳ ಮರೆಸಿಸಂತಸದಿಂದಿರುವಮುತ್ತುಗಳನ್ನುಇತ್ತವನುನೀನಲ್ಲವೇ ************************************************************** –

ಗಜಲ್‌ Read Post »

ನಿಮ್ಮೊಂದಿಗೆ

ಗಜಲ್

ಗಜಲ್ ಶೈಲಜಾ.ವಿ.ಕೋಲಾರ ಊರಿಗೆ ಊರೇ ಬೆಂಕಿಯಲ್ಲಿ ಬೇಯುತ್ತಿದೆ ಕಾಯುವರಾರಿಲ್ಲಿಜಾತಿಗೆ ಜಾತಿ ಜಿದ್ದಾಜಿದ್ದಿ ಶಾಂತಿ ಸೊರಗುತ್ತಿದೆ ಕಾಯುವರಾರಿಲ್ಲಿ ಕಳೆ ಬೆಳೆದ ಹೊಲದಲ್ಲಿ ಬೆಳೆ ಬೆಳೆಯಲು ಜಾಗವುಂಟೇಕೂಳಿಲ್ಲದ ಹಸುಳೆಯ ಕೂಗು ಒಣಗುತ್ತಿದೆ ಕಾಯುವರಾರಿಲ್ಲಿ ಸ್ವಸ್ಥ ಸಂದೇಶ ಹೊತ್ತುಬಂದ ಬಿಳಿ ಪಾರಿವಾಳ ಕೆಂಪಾಗಿ ಹಾರುತ್ತಿದೆಗಾಯ ಒಸರುವ ರಕ್ತಕೆ ಗಾಳಿ ಗೋಳಾಡುತ್ತಿದೆ ಕಾಯುವರಾರಿಲ್ಲಿ ಮೇಲು ಕೀಳೆಂಬ ಬೇರು ಬಲವಾಗಿ ಮತ ಧರ್ಮ ಸಿಟಿಲೊಡೆದಿದೆಊರ ಕೆರೆ ಜಾಲಿ ಮರದ ಮುಳ್ಳು ನಂಜೇರುತ್ತಿದೆ ಕಾಯುವರಾರಿಲ್ಲಿ ಹಲವು ಹೂಗಳು ಒಂದೇ ಮಾಲೆಯಲಿ ನೋಟ ಸೆಳೆದಿವೆಕುರಬುವ ಕೈಗೆ ಮಾತಿಲ್ಲದ ಶೈಲವೂ ನೋಯುತ್ತಿದೆ ಕಾಯುವರಾರಿಲ್ಲಿ ***************************

ಗಜಲ್ Read Post »

ನಿಮ್ಮೊಂದಿಗೆ

ಅಂಬರ ಫಲ!

ಕವಿತೆ ಅಂಬರ ಫಲ! ಗಣಪತಿ ಗೌಡ ಅಂಬರದಲಿ ತೂಗುತಿಹುದುಒಂದೇ ಒಂದು ಹಣ್ಣು,ಬೆಳದಿಂಗಳ ರಸವೇ ಕುಡಿದು––ತಂಪು ರಸಿಕ ಕಣ್ಣು!/ಅಂಬರದಲಿ. ……// ಕೆಲ ದಿನದಲಿ ಕರಗಿ ಬಲಿತುತುಂಬಿ ಪೂರ್ಣ ಪ್ರಾಯ!ಹೊರ ಸೂಸಿದೆ ಹೊನ್ನ ಕಿರಣಕುಡಿದು ಹೊನ್ನ ಪೇಯ!/ಅಂಬರದಲಿ……….// ಹೊಂಬೆಳಕದು ಸುರಿವ ಜೇನು!ಚಪ್ಪರಿಸುತ ಜಿಹ್ವೆ,ಮುಳುಗೇಳುತ ಆನಂದದಿ,ಮರೆತು ಎಲ್ಲ ನೋವೇ!/ಅಂಬರದಲಿ……….// ತಂಪು ಬೆಳಕ ಬೆರಳಿನಲ್ಲಿನೇವರಿಸುತ ಎಲ್ಲ,‘ಶಾಂತಗೊಳ್ಳಿ’ ಎನುವ ತೆರದಿಸವರುತೆಲ್ಲ ಗಲ್ಲ! /ಅಂಬರದಲಿ………..// *****************************************

ಅಂಬರ ಫಲ! Read Post »

ನಿಮ್ಮೊಂದಿಗೆ

ಕಲ್ಲಾಗಿಯೇ ಇರಬೇಕಿತ್ತು!

ಕವಿತೆ ಕಲ್ಲಾಗಿಯೇ ಇರಬೇಕಿತ್ತು! ರಾಜೇಶ್ವರಿ ಭೋಗಯ್ಯ ಇದ್ದದ್ದು ನಿಜವಾಗಿದ್ದರೆ ಅಹಲ್ಯೆಹೇಗೆ ಸಹಿಸಿಕೊಂಡಳೋನೋವನ್ನೂ ಅವಮಾನವನ್ನು ತನ್ನ ತಪ್ಪಿಲ್ಲದಿದ್ದರೂ ಶಾಪವಿಟ್ಟ ಅವಮಾನಕ್ಕೆವಿನಾಕಾರಣ ಕಲ್ಲಾಗಿಸಿದ ನೋವಿಗೆಹೇಗೆ ಸಹಿಸಿಕೊಂಡಳೋ ಅಬಲೆ ಹೆಂಡತಿಯನ್ನು ನೆಲಕ್ಕೆ ತುಳಿದುನಿನ್ನನ್ನು ಮೇಲಕ್ಕೆತ್ತುವ ಹಿಂದೆಯಾವ ಲೋಕ ಕಲ್ಯಾಣದ ಸಂಚಿತ್ತು ಗೌತಮ ಸಹಕರಿಸಲಿಲ್ಲಇಂದ್ರನೂ ಕಾಪಾಡಲಿಲ್ಲವ್ರತಕೆಟ್ಟರೂ ಸುಖಪಡಲಿಲ್ಲಅನ್ಯಾಯವ ಸಹಿಸಿಕೊಂಡು ಸುಮ್ಮನಿರಬಾರದಿತ್ತು ಕಲ್ಲಾಗಿಯೇ ಇರಬೇಕಿತ್ತು ನೀನುರಾಮನ ಪಾದಸ್ಪರ್ಶ ಯಾಕೆ ಬೇಕಿತ್ತುಒಳಗೇ ಹುದುಗಿರಬೇಕಿತ್ತು ನೀನುನಿಜ ಧರ್ಮ ತಿಳಿದವ ಬುದ್ದಬಂದು ನಿನ್ನ ಮೈ ದಡವುವವರೆಗೂ. **********************

ಕಲ್ಲಾಗಿಯೇ ಇರಬೇಕಿತ್ತು! Read Post »

ನಿಮ್ಮೊಂದಿಗೆ

ಆರದಿರಲೀ ದೀಪ

ಕವಿತೆ ಆರದಿರಲೀ ದೀಪ ಶಾಂತಲಾ ಮಧು ಆರದಿರಲೀ ದೀಪಉತ್ಸಾಹದೀ ದೀಪಆರದಿರಲಿ ಕ್ಷಣಿಕ ಬದುಕಿನಸುಡುವ ಗಾಳಿಯಕನಸ ಮಾತಿನಭ್ರಮೆಯ ಬೆಂಕಿಗೆಆರದಿರಲಿ ದೀಪ ಮುಗಿಲ ಮೋಡದನಡುವೆ ಇಣುಕುವತಮವ ಕಳೆಯುವರವಿಯ ತೆರದಲಿ ಸ್ನೇಹ ಸಿಂಚನ ರಕ್ಷೆ ಇರಲಿಹರಿವ ನದಿಯ ಹರಿತವಿರಲಿಆರದಿರಲಿ ಉತ್ಸಾಹದೀ ದೀಪಆರದಿರಲಿ ಪ್ರೀತಿಉಸಿರ ಹಸಿರು ಉಳಿಯಲಿಮನಸು ಮನಸಿಗೆದೀಪವಾಗಲಿಆರದಿರಲಿ ದೀಪಉತ್ಸಾಹದೀ ದೀಪಆರದಿರಲಿ *******************

ಆರದಿರಲೀ ದೀಪ Read Post »

You cannot copy content of this page

Scroll to Top