ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಕಾನನದ ಸುಮ ಶ್ರೀ ಉಮೇಶ ಮುನವಳ್ಳಿಯವರ‘ಕಾನನದ ಸುಮ’ ಕವನ ಸಂಕಲನ. ಸಾಹಿತ್ಯ ನಿರ್ಮಾಣದ ಪರಮ ಉದ್ದೇಶ ಒಳ್ಳೆಯದನ್ನು ಹೇಳುವುದು, ಒಳ್ಳೆಯದನ್ನು ಮಾಡಲು ಪ್ರೇರೇಪಿಸುವುದು ಮತ್ತು ಮುಂದಿನವರಿಗೆ ಸಾಗಿಸಿ ಸಾಗುವುದು. ಸಾಹಿತ್ಯ ವಸ್ತು ಯಾವುದೇ ಇರಲಿ, ಅದರ ಹಿಂದೆ ನಿಸರ್ಗವಿರುತ್ತದೆ ಮತ್ತು ಜಗತ್ತು ಇರುತ್ತದೆಯೆಂಬುದನ್ನು ಮರೆತು ಬರೆದರೆ ಅಂಥ ಸಾಹಿತ್ಯಕ್ಕೆ ಭವಿಷ್ಯವಿರುವುದಿಲ್ಲ. ಕವಿತೆಯಲ್ಲಿ ಉತ್ತಮ ಕವಿತೆ, ಕೆಟ್ಟ ಕವಿತೆ ಎಂಬುದಿರುವುದಿಲ್ಲ, ಅದು ಕವಿತೆ ಹೌದೋ ಅಲ್ಲವೋ? ಎಂಬುದಷ್ಟೇ ಗಣನೆಗೆ ಬರುತ್ತದೆ. ಅದು ಹೌದಾದರೆ ಉತ್ತಮವಾಗಿಯೇ ಇರುತ್ತದೆ. ಯಾವುದಕ್ಕೂ ಕಮಿಟೆಡ್ ಆಗಿರದೆ ಸ್ವತಂತ್ರವಾಗಿರುವುದು ಉತ್ತಮ ಕವಿತೆಯ ಲಕ್ಷಣ. ಕವಿಯಾದವನು ಲೌಕಿಕ ಆಕರ್ಷಣೆಯಿಂದ ತನ್ನನ್ನು ಬಿಡಿಸಿಕೊಂಡು, ಸಹೃದಯ(ಓದುಗ)ನನ್ನೂ ಬಿಡಿಸಿ, ತನ್ನ ರಚನೆಯ ಕಡೆಗೆ ಸೆಳೆಯುತ್ತಾನಲ್ಲ ಅದೇ ಅವನ ಹೆಗ್ಗಳಿಕೆ. ಈ ಹಿನ್ನೆಲೆಯಲ್ಲಿ ಶ್ರೀ ಉಮೇಶ ಮುನವಳ್ಳಿ ಅವರ ‘ಕಾನನದ ಸುಮ’ ಕವನ ಸಂಕಲನವನ್ನು ಅವಲೋಕಿಸಿದಾಗ ಬಹಳ ಸಂತೋಷವಾಯ್ತು. ಪ್ರಾಥಃಸ್ಮರಣೀಯರಾದ ಹೊಸಗನ್ನಡ ಸಾಹಿತ್ಯ ಸಂಭೂತರೆನಿಸಿದ ಶ್ರೀ ಬಿ. ಎಂ. ಶ್ರೀ ಅವರು ಇಂಗ್ಲೀಷ ಪ್ರಾಧ್ಯಾಪಕರಾಗಿದ್ದು, ಕನ್ನಡ ಸಾಹಿತಿಗಳಾಗಿದ್ದರು. ಎರಡೂ ಭಾಷೆಗಳೂ ಅವರಿಗೆ ಇಷ್ಟ. “ಇವಳ ಸೊಬಗನವಳು ತೊಟ್ಟು ನೋಡಬಯಸಿದೆ; ಅವಳ ತೊಡಿಗೆ ಇವಳಿಗಿಟ್ಟು ಹಾಡಬಯಸಿದೆ” ಎಂದು ಎದೆದುಂಬಿ ಹಾಡಿದವರು. ಅವರು ಒಂದೆಡೆ “ನಾನು ಇಂಗ್ಲೀಷನ್ನೇನು ಕಡಿಮೆ ಪ್ರೀತಿಸುವುದಿಲ್ಲ; ಆದರೆ ಕನ್ನಡವನ್ನು ಹೆಚ್ಚು ಪ್ರೀತಿಸುತ್ತೇನೆ” ಎಂದು ಉದ್ಗಾರ ತೆಗೆದವರು. ಇದನ್ನು ಯಾಕೆ ಹೇಳಿದೆನೆಂದರೆ ಶ್ರೀ ಮುನವಳ್ಳಿಯವರ ಮಾತೃಭಾಷೆ ಕನ್ನಡ ಮತ್ತು ಅಧ್ಯಯನದ ಭಾಷೆ ಇಂಗ್ಲಿಷ. ಇವರಿಗೂ ಆ ತಾಕಲಾಟ ಅನುಭವಕ್ಕೆ ಬಂದಿರಲು ಸಾಕು. ಶ್ರೀ ಮುನವಳ್ಳಿಯವರು ‘ಬಿ. ಎಂ. ಶ್ರೀ’ ಯವರು ಬಳಸಿದ ‘ಸೊಬಗು’ ಮತ್ತು ‘ತೊಡಿಗೆ’ ಪದಗಳನ್ನು ಪ್ರತಿಮೆಯಾಗಿ ಅರಿತು ಬರೆಯಲೆಂದು ಮನವಿ.[2:20 pm, 19/06/2020] UMESH MUNAVALLY: ‘ಕಾನನದ ಸುಮ’ ಕವನ ಸಂಕಲನಕ್ಕೆ ಕವಿಯ ಮಡದಿಯೇ ಮುನ್ನುಡಿ ಬರೆದುದು ಸಾಹಿತ್ಯ ಕ್ಷೇತ್ರಕ್ಕೆ ಹೊಸತು. ಅವರು ಮುನ್ನುಡಿಗೆ ಕೊಟ್ಟ ಶೀರ್ಷಿಕೆ ; “ನಿನ್ನ ಕವಿತೆಗೆ ನಾನೇ ಮುನ್ನುಡಿ” ಎಂಬುದು ಒಂದು ಅಧ್ಭುತ ಪ್ರತಿಮೆಯಾಗಿದೆ! ಶ್ರೀ ಮುನವಳ್ಳಿಯವರು ರಚಿಸಿರುವ, ರಚಿಸಲಿರುವ ಎಲ್ಲ ಸಾಹಿತ್ಯಕ್ಕೂ ಅವರೇ ಪ್ರತಿಮೆ ಮತ್ತು ಮತ್ತು ಪ್ರತೀಕವೆಂದರೆ ತಪ್ಪಾಗಲಾರದು. ಈ ಸಂಕಲನದ ‘ಋತು’ ಕವನ ಪ್ರತಿಮೆಗಳ ಸರಮಾಲೆ! ‘ನಿನ್ನ ಹಾರೈಕೆ’ ಯಲ್ಲಿ ಬಳಸಿದ ‘ಇತಿಹಾಸದ ಮಸಣ’ ಸುಂದರ ಪ್ರತೀಕ. ಮನುಷ್ಯನ ಬಾಳಿಗೆ ನಂಬಿಕೆ ಬಹಳ ಮುಖ್ಯ, ಇತರರನ್ನು ನಂಬುವ ಮೊದಲು ತನ್ನನ್ನು ನಂಬಬೇಕು, ನಂಬಿಕೆಯು ಬಾಳಿಗೊಂದು ಭರವಸೆ. ಈ ಮಾತಿಗೆ ಪ್ರತೀಕದಂತಿವೆ “ನನಗೂ ಒಬ್ಬ ಗೆಳೆಯ ಬೇಕು”, “ಬಾಳ ಕವಿತೆ”, ಮತ್ತು “ಸ್ಪಟಿಕದಂತೆ ಸ್ಪಷ್ಟ” ಕವಿತೆಗಳು. ಶ್ರಂಗಾರಭರಿತ ರಸಭರಿತ ಕಾವ್ಯದಂತಿದೆ “ಹೆಣ್ಣು” ಕವಿತೆ. ಕವಿತೆ, ಪ್ರಾಮಾಣಿಕ ಸಂವೇದನೆಯನ್ನು ಹೊರಹಾಕುವ ಒಂದು ಸೃಜನಶೀಲ ಕ್ರಿಯೆ. ಮೊಗ್ಗೊಂದು ಅರಳಿ ಹೂವಾಗಿ ಚಲುವನ್ನೂ ಸುಗಂಧವನ್ನೂ ಹೊರಸೂಸುವಂತೆ. ಸಿಂಪಿಗ ಬಟ್ಟೆಯನ್ನು ಕತ್ತರಿಸುವ ಪೂರ್ವದಲ್ಲಿ ತನಗೆ ಸಮಾಧಾನ ಆಗುವವರೆಗೆ ಅಳತೆ ತೆಗೆದುಕೊಳ್ಳುತ್ತಾನೆ. ಹಾಗೆಯೇ ಕವನ ರಚನೆಯ ಪೂರ್ವದಲ್ಲಿ ಕವಿ ಹಲವು ದಿಸೆಯಲ್ಲಿ ಯೋಚಿಸಬೇಕು. ಈ ಸಂಕಲನದ ಕೆಲವು ವಾಚ್ಯಾರ್ಥದ ಮತ್ತು ಉಪದೇಶಾತ್ಮಕ ಕವನಗಳನ್ನು ಬಿಟ್ಟರೆ ಉಳಿದೆಲ್ಲ ಕವನಗಳು ಉತ್ತಮವಾಗಿವೆ. ಓದುಗನನ್ನು ಚಿಂತನೆಗೆ ತೊಡಿಸುತ್ತವೆ. ಪ್ರಕೃತಿಯ ಒಮ್ಮೆ ಬನಶಂಕರಿಯಾದರೆ ಪ್ರಸಂಗ ಬಂದರೆ ರಣಭಯಂಕರೀಯೂ ಆಗುತ್ತಾಳೆ. ಹೊಲದಲ್ಲಿ ಬೆಳೆಯ ಜೊತೆ ಕಳೆಯೂ ಬೆಳೆಯುತ್ತದೆ. ರೈತ ಕಳೆ ತೆಗೆದು ಬೆಳೆ ನಳನಳಿಸುವಂತೆ ಮಾಡುತ್ತಾನೆ. ಹಾಗೆಯೇ ಸಮಾಜದಲ್ಲಿ ಒಳ್ಳೆಯದರ ನಡುವೆ ಕೆಟ್ಟದ್ದೂ ಇರುತ್ತದೆ, ಕವಿಯಾದವನು ಅದನ್ನು ಎದುರಿಸಬೇಕು. ಮನ ಮಿಡಿದಾಗ ಧ್ವನಿಯ ಅಲೆಗಳೇ ಕವನಗಳಾಗಿ ಮೂಡಿಬರುತ್ತವೆ.

ಪುಸ್ತಕ ಸಂಗಾತಿ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಬಾಗಿಲು ತೆರೆಯೇ ಸೇಸಮ್ಮ ಬಾಗಿಲು ತೆರೆಯೇ ಸೇಸಮ್ಮವೈಚಾರಿಕ ಲಲಿತ ಪ್ರಬಂಧಗಳುಲೇಖಕರು- ಶರತ್ ಭಟ್ ಸೇರಾಜೆಅಂಕಿತ ಪುಸ್ತಕ ಅಂಕಿತ ಪ್ರತಿಭೆ ಮಾಲಿಕೆ-5 ಅಡಿಯಲ್ಲಿ ಅದರ ಸಂಪಾದಕರಾದ ಜೋಗಿಯವರು ಶರತ್ ಭಟ್ಟರನ್ನು ಗುರುತಿಸಿ ಈ ಕೃತಿಯನ್ನು ಪ್ರಕಟಿಸಲು ಅನುವು ಮಾಡಿಕೊಟ್ಟಿದ್ದಾರೆ.ಶರತರ ಈ ಎಲ್ಲಾ ಹದಿನೈದು ಪ್ರಬಂಧಗಳು ಈ ಗೌರವಕ್ಕೆ ಅರ್ಹವಾಗಿವೆ. ಈ ಲೇಖನಗಳನ್ನು ಓದಿದಾಗ ಅವರು ಅಪಾರವಾಗಿ ಓದಿಕೊಂಡವರು ಎಂಬುದೂ ಗೊತ್ತಾಗುತ್ತದೆ.ಬಳಸಿದ ಭಾಷೆ ಬಹಳ ಚೆನ್ನಾಗಿದೆ.ಅವರ ತರ್ಕ, ತಮಾಷೆ ಮತ್ತು ವಿಷಯವನ್ನು ವಿವರಿಸಲು ಕೊಡುವ ಉದಾಹರಣೆಗಳು ವಿಶಿಷ್ಟವಾಗಿವೆ. ಗುರುತ್ವದ ಅಲೆ ಕುರಿತು ಸಾಮಾನ್ಯ ಜನರಿಗೆ ಅರ್ಥವಾಗುವಂತೆ ಸರಳವಾಗಿ ವಿವರಿಸಬಹುದು ಎಂದು ಸೇರಾಜೆ ತೋರಿಸಿಕೊಟ್ಟಿದ್ದಾರೆ. ಜೊತೆಗೆ ಪಂಚಿಂಗ್ ಡೈಲಾಗ್ಸ್ ಇವೆ. ಇವು ನಮ್ಮಲ್ಲಿ ನಗುವನ್ನು ಉಕ್ಕಿಸುತ್ತವೆ. ಅವರು ಗೋಪಾಲಕೃಷ್ಣ ಅಡಿಗರ ಯಾವ ಮೋಹನ ಮುರಲಿ ಕರೆಯಿತು ಕವಿತೆಯ ಬಗ್ಗೆ ಸಾಹಿತ್ಯದ ವಿದ್ಯಾರ್ಥಿಯಂತೆ ಚೆಂದವಾಗಿ ವರ್ಣಿಸಿದ್ದಾರೆ.ಬಿಎಂಶ್ರೀಯಿಂದ ಬರ್ನ್ಸ್ ಎಂಬ ಕವಿಯವರೆಗೆ ಉಲ್ಲೇಖ ಮಾಡಿದ್ದಾರೆ. ಥಟ್ ಅಂತ ರಾಷ್ಟ್ರಗಳ ಸಂಖ್ಯೆ ಬಗ್ಗೆ ಶರತ್ ಹೇಳಿಬಿಡುತ್ತಾರೆ.ದೇಶಗಳನ್ನೂ, ಅವುಗಳ ಗುಟ್ಟುಗಳನ್ನು, ಜೋಕುಗಳನ್ನು ಕ್ರ್ಯಾಕ್ ಮಾಡುತ್ತಾ ಬೆಡ್ ರೂಂವರೆಗೂ ಬರುತ್ತಾರೆ. ಅರ್ಥವೆಂಬ ಊಸರವಳ್ಳಿಯಲ್ಲಿ ಶಬ್ದದ ಅನುಕರಣೆ ಮಾಡಿ ಬದಲಾದ ಅರ್ಥಗಳ ಬಗ್ಗೆ ಮಾಹಿತಿ ಕೊಡುತ್ತಾರೆ. ರೀಸಸ್ ( ಬಿಡುವು ) ಶಬ್ದ ಮೂತ್ರ ವಿಸರ್ಜನೆಗೆ ಬಳಕೆಯಾಗಿದ್ದು. ಆಯಿಲ್, ಸಕತ್, ಪ್ರವೀಣ ಮುಂತಾದ ಶಬ್ದಗಳ ಬಗ್ಗೆ ಇಲ್ಲಿ ಭಟ್ಟರು ಹೇಳಿದ್ದಾರೆ. ಬಾಗಿಲು ತೆರೆಯೇ ಸೇಸಮ್ಮ – ನಾವು ಇಂದು ಸೋಷಿಯಲ್ ಮೀಡಿಯಾಗಳಲ್ಲಿ ಬಳಸುವ ಪಾಸ್ವರ್ಡ್ ಕುರಿತು ಮಾಹಿತಿ ನೀಡುವ ಮತ್ತು ಹ್ಯಾಕರ್ ಗಳ ವಿವರ ನೀಡುವ ಪ್ರಬಂಧ.ಇದು ನಿಮಗೆ ಗೂಗಲ್ ಮಾಡಿದರೂ ಸಿಗಬಹುದು ಆದರೆ ಇಲ್ಲಿ ಅವರು ವಿವರಿಸಿದರ ಶೈಲಿ ಇದೆಯಲ್ಲ ಇದು ವಿಭಿನ್ನ ಮತ್ತು ಸರಳವಾಗಿದೆ. ಮರ್ಯಾದೆ ತೆಗೆಯುವ ಕಲೆಯನ್ನು ಓದುತ್ತಾ ನೋಡಬಹುದು ಮತ್ತು ಬೆಚ್ಚಿಬೀಳಬಹುದು.ಇಂಗ್ಲಿಷ್ ಮಾಧ್ಯಮದ ಕುರಿತು ಅವರ ನಿಲುವನ್ನು ಒಪ್ಪದಿರುವುದು ಕಷ್ಟ. ಇಂಗ್ಲೀಷ್ ಭಾಷೆ ದೋಸೆಯಾದರೆ ಮಾತೃಭಾಷೆ ಕನ್ನಡ ಊಟ ಎಂಬ ಸೋದಾಹರಣೆ ಚೆನ್ನಾಗಿದೆ. ಲೆಕ್ಕ ಹಾಕಿ ಸುಳ್ಳು ಹೇಳಿ – ಈ ಕ್ಷಣದ ಕಟು ವಾಸ್ತವವನ್ನು ಅನಾವರಣ ಮಾಡುವ ಲೇಖನ.ಸಿನೆಮಾ ಮತ್ತು ಕಳ್ಳತನ ಕುರಿತು ಅವರ ವಿಚಾರ, ನಮ್ಮ ತಲೆಗೆ ಕೈ ಹಾಕಿ ಹೂಂಗುಟ್ಟುವಂತೆ ಮಾಡುತ್ತದೆ.ವಿಮರ್ಶಕರಿಗೆ ಶಾಲಿನಲ್ಲಿ ಕಲ್ಲು ಹಾಕಿ ತಟ್ಟಿದ್ದಾರೆ. ಕಾರಂತಜ್ಜನ ಕಥೆಗಳು – ಇದರಲ್ಲಿ ಕಾರಂತರ ಕುರಿತು ಅಪರೂಪದ ವಿಷಯಗಳಿವೆ.ಬಲಿ ಚಕ್ರವರ್ತಿಯ ತ್ರಿವಿಕ್ರಮ ದಲ್ಲಿ ಮಿಖಾಯಿಲ್ ತಾಲ್ ಎಂಬ ಚೆಸ್ ಆಟಗಾರ ಬರುತ್ತಾನೆ.ಅದನ್ನು ಓದುವುದೇ ಒಂದು ಪುಳಕ. ನಮ್ಮ ತಲೆಯೂ ನಮ್ಮ ಹರೆಟೆಯೂ; ವೈಚಾರಿಕ ಲಲಿತ ಪ್ರಬಂಧ ಬರೆಯಲು ಆಸಕ್ತಿ ಇರುವವರು ಅಧ್ಯಯನ ಮಾಡುವಂತಹ ಒಂದು ಲೇಖನ. ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ಒಮ್ಮೆ ಓದಲೇಬೇಕಾದ ಲೇಖನಗಳ ಗುಚ್ಛ ಶರತರ ಈ ಕೃತಿ ಎಂದು ಬೇಷರತ್ತಾಗಿ ಹೇಳುವೆ.******* ಡಾ.ಅಜಿತ್ ಹರೀಶಿ

ಪುಸ್ತಕ ಸಂಗಾತಿ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕ: ಫೂ ಮತ್ತು ಇತರ ಕಥೆಗಳು ಲೇಖಕರು: ಮಂಜುನಾಯಕ ಚಳ್ಳೂರು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಳ್ಳೂರಿನವರಾದ ಮಂಜುನಾಯಕ ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿತು ಕೆಲಕಾಲ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಕಲರ್ಸ್ ಸೂಪರ್ ಕನ್ನಡ ವಾಹಿನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಸೃಜನಶೀಲ ಲೇಖಕರಾದ ಮಂಜುನಾಯಕ ಅವರ ಮೊದಲ ಕಥಾ ಸಂಕಲನ ಇದು. ಇಲ್ಲಿನ ಫೂ, ಖತಲ್ ರಾತ್ರಿ ಹಾಗೂ ತೇರು ಸಾಗಿತಮ್ಮ ನೋಡಿರೆ ಎಂಬ ಮೂರು ಕಥೆಗಳಿಗೆ ೨೦೧೮ರ ಟೊಟೊ ಯುವ ಪುರಸ್ಕಾರ ಲಭಿಸಿದೆ. ಅಹರ್ನಿಶಿ ಪ್ರಕಾಶನದಿಂದ ಪ್ರಕಟವಾಗಿರುವ ಈ ಕಥಾ ಸಂಕಲನದಲ್ಲಿ ಒಟ್ಟು ೭ ಕಥೆಗಳಿವೆ. ವೈವಿಧ್ಯಮಯ ಕಥಾವಸ್ತುಗಳು, ಪಾತ್ರಗಳ ಮೂಲಕ ಇಲ್ಲಿನ ಕಥೆಗಳು ಓದುಗರನ್ನು ಸೆಳೆದುಬಿಡುತ್ತವೆ. ಈ ಪುಸ್ತವನ್ನ ಓದಿ ಮುಗಿಸುವಾಗ ಖುಷಿಯೊಂದು ಮನಸ್ಸನ್ನು ಆವರಿಸಿಕೊಂಡಿತ್ತು. ಈ ಕಥೆಗಳು ನಮ್ಮನ್ನು ಕೂಡ ಬಿಸಿಲ ಸೀಮೆಗೆ ಕರೆದೊಯ್ಯುತ್ತವೆ. ಅಲ್ಲಿನ ಜನರ ಬದುಕನ್ನು ಪರಿಚಯಿಸುತ್ತದೆ. ಇಲ್ಲಿನ ಪಾತ್ರಗಳ ಸಂಭಾಷಣೆಯಲ್ಲಿ ಉತ್ತರ ಕನ್ನಡ ಭಾಷೆಯನ್ನು ಬಳಸಲಾಗಿದೆ. ಮೊದಲ ಕಥೆ ‘ಫೂ’ ಅಲ್ಲಿ ಕುಟುಂಬದೊಳಗೆ ಹೆಣ್ಣಿನ ಮೇಲೆ ನಡೆಯುವ ಹಿಂಸೆಯನ್ನು ಪದರ ಪದರವಾಗಿ ತಿಳಿಸಲಾಗಿದೆ. ಚಿಕ್ಕ ಹುಡುಗನ ನಿರೂಪಣೆಯಂತು ಮನಸನ್ನು ತಟ್ಟುತ್ತದೆ ಅವಿವಾಹಿತಳಾದ ಜಯತ್ತೆಯ ಪಾತ್ರವಂತು ಮನದಲ್ಲಿ ಉಳಿದುಬಿಡುತ್ತದೆ. ಎಲ್ಲ ಕಷ್ಟಗಳನ್ನೂ ಅಣ್ಣ ಅತ್ತಿಗೆಯರ ಚುಚ್ಚುಮಾತುಗಳನ್ನು ಸಹಿಸಿಕೊಂಡೇ ಬರುವ ಜಯತ್ತೆ, ಪುಟ್ಟ ಬಾಲಕನೊಡನೆ ಆಕೆಯ ಒಡನಾಟ ತಾಯಿ ಮಗುವಿನಂತಿರುತ್ತದೆ. ‘ನನ ಹೊಟ್ಯಾಗ್ ಹುಟ್ಟೇಕಾದದ್ ಇದು. ತಪ್ಪಿ ನಿನ್ ಹೊಟ್ಯಾಗ್ ಹುಟ್ಟೇತಿ” ಎಂಬ ಮಾತಿನಲ್ಲಿ ಅಳಿಯನ ಮೇಲಿನ ಮಮತೆ ವಾತ್ಸಲ್ಯಗಳನ್ನು ಗಮನಿಸಬಹುದು. ಜಯತ್ತೆ ಎಂದರೆ ತನಗೆ ಜೀವ ಎಂದೂ ಆಕೆಯ ಬಾಯಲ್ಲಿ ಕಾಮನಬಿಲ್ಲಿತ್ತು ಎಂದು ಹೇಳುವ ಹುಡುಗ, ಅತ್ತೆ ಬಾಯಲ್ಲಿ ನೀರು ತುಂಬಿಕೊಂಡು ಬಿಸಿಲಿಗೆ ಮುಖ ಮಾಡಿ ಫೂ ಮಾಡುವಾಗಲೆಲ್ಲ ಮೂಡಿ ಬರುವ ಕಾಮನಬಿಲ್ಲನ್ನು ಕಂಡು ವಿಸ್ಮಯಗೊಳ್ಳುವ ಮುಗ್ಧ ಹುಡುಗ ತುಂಬ ಇಷ್ಟವಾಗಿಬಿಡುತ್ತಾನೆ. ಇಲ್ಲಿನ ಜಯತ್ತೆಯ ಪಾತ್ರವು ವೈದೇಹಿ ಅವರ ‘ಜಾತ್ರೆ’ ಸ್ಮೃತಿ ಕಥನದಲ್ಲಿ ಬರುವ ‘ಮಂಜತ್ತೆ’ಯ ಪಾತ್ರವನ್ನು ನೆನಪಿಸುತ್ತದೆ. ‘ಖತಲ್ ರಾತ್ರಿ’ ಕಥೆಯಲ್ಲಿ ಮೊಹರಂ ದೇವರುಗಳ ಕೊನೆಯ ರಾತ್ರಿಯೇ ಖತಲ್ ರಾತ್ರಿ. ಜಾತಿ ಧರ್ಮಗಳನ್ನು ಮರೆತಯ ಎಲ್ಲರೂ ಜೊತೆಗೂಡಿ ಆಚರಿಸುವ ಹಬ್ಬದ ಸಂಭ್ರಮವಿದೆ. ಜೊತೆಗೇ ಮಕ್ಕಳಲ್ಲಿ ಅಗಲಿದ ಅಪ್ಪನ ನೆನಪುಗಳಿವೆ. ಸಂತೋಷದ ಮಧ್ಯೆಯೇ ನೋವಿನ ಎಳೆಯೊಂದು ಗೋಚರಿಸುತ್ತದೆ. ‘ತೇರು ಸಾಗಿತಮ್ಮ ನೋಡಿರೆ’ ಕಥೆಯಲ್ಲಿ ಶ್ರೀಶೈಲ ಎಂಬ ಹುಡುಗನ ಹೃದಯವಿದ್ರಾವಕ ಕಥೆಯಿದೆ. ಓದಲು ಬುದ್ಧಿವಂತನಾದ ಆತನಿಗೆ ಭಜನೆಯ ಮೇಲೆ ಅಪಾರ ಆಸಕ್ತಿ. ಶಾಲೆ ಬಿಟ್ಟ ಮೇಲೆ ಶರಣಪ್ಪನಿಂದ ಸಾಧ್ಯವಾದಷ್ಟೂ ಭಜನೆಗಳನ್ನು ಕಲಿತು ಹಾಡುತ್ತಿದ್ದ. ಶರಣಪ್ಪ ಹುಡುಗನಿಗೆ ಪ್ರೀತಿಯ ಕಕ್ಕಪ್ಪನಾಗಿದ್ದ. ಕಕ್ಕಪ್ಪನ ಸಾವು ಶ್ರೀಶೈಲನ ಬದುಕಿನ ಮೇಲೆ ಮಾಡಿದ ದಟ್ಟ ಪರಿಣಾಮಗಳನ್ನು ವಿವರಿಸಲಾಗಿದೆ. ಸಮಾಜದ ಕಣ್ಣಿಗೆ ಹುಚ್ಚನಂತೆ ಕಾಣುವ ಮಗನ ಬಗ್ಗೆ ತಾಯಿಯ ದುಃಖ ಸಂಕಟಗಳಿವೆ. ‘ವಜ್ರಮುನಿ’ ಕಥೆಯಲ್ಲಿ ಕೆಟ್ಟ ಚಟಕ್ಕೆ ಬಲಿಯಾಗಿ ಇದ್ದದ್ದನ್ನೆಲ್ಲ ಕಳಕೊಂಡು ಕೆಲಸಕ್ಕೂ ಹೋಗದೆ ತನ್ನ ಜವಾಬ್ದಾರಿಗಳ ಕಡೆ ಗಮನ ಹರಿಸದೆ ಮಕ್ಕಳೊಂದಿಗೆ ಆಡುತ್ತಾ, ಕಾಲ ಬದಲಾದರೂ ತನ್ನ ನೆನಪುಗಳಲ್ಲೇ ಮೈಮರೆತಿರುವ ಭಗವಂತ ಊರವರ ದೃಷ್ಟಿಯಲ್ಲಿ ವಜ್ರಮುನಿಯಾದ ಕಥೆ ಹೇಳುತ್ತಾರೆ. ‘ಕನಸಿನ ವಾಸನೆ’ ಕಥೆಯಲ್ಲಿ ಮಿರ್ಚಿ ರಂಗಮ್ಮನ ಪಾತ್ರ ಗಮನಾರ್ಹವಾಗಿದೆ. ಲಚುಮನಿಗೆ ತನ್ನ ತಪ್ಪಿನ ಅರಿವಾಗಿ ಮನ ಪರಿವರ್ತನೆಗೊಂಡು “ತಪ್ಪಾತಾ ನಮವ್ವಾ” ಎಂದು ರಂಗಮ್ಮನಲ್ಲಿ ಕ್ಷಮೆಯಾಚಿಸಿ ಅವಳ ಮಡಿಲಲ್ಲಿ ಮಗುವಾಗಿ ಮಲಗುವ ಚಿತ್ರಣ ಅಪ್ಯಾಯಮಾನವಾಗಿದೆ. ‘ಪಾತಿ’ ಕಥೆಯಲ್ಲಿ ಬಾಲ್ಯದಿಂದ ಹದಿಹರೆಯದವರೆಗೆ ಜೊತೆಗೆ ಆಡಿಬೆಳೆವ ಮಕ್ಕಳ ಸಂಭ್ರಮ ಓದುಗರನ್ನೂ ತಮ್ಮ ಬಾಲ್ಯವನ್ನು ನೆನಪಿಸುವಂತೆ ಮಾಡುತ್ತದೆ. ಮತ, ವರ್ಣ ಬೇಧಗಳಿಲ್ಲದೆ ಹುಟ್ಟಿ ಬೆಳೆವ ಸ್ನೇಹ. ಮುಗಿಯದ ಮಾತು, ನಿಸ್ವಾರ್ಥ ಪ್ರೀತಿ, ಪರಸ್ಪರ ರೇಗಿಸುವಿಕೆ ಜಗಳ, ಮುನಿಸು, ರಾಜಿ ಕೋಪಗಳು ಅವರ ಸ್ನೇಹದ ಸಂಬಂಧವನ್ನು ಗಟ್ಟಿಗೊಳಿಸುತ್ತಿತ್ತು. ಈ ಕಥೆ ಓದಿ ಮುಗಿಸಿದಾಗ ಫಾತಿಮಳಂಥ, ಆಕೆಯ ಗೆಳೆನಂಥ ಸ್ನೇಹಿತರು ಇರಬೇಕೆಂದು ಅನಿಸಿಬಿಡುತ್ತದೆ.‘ಮಿಂಚುಹುಳ’ದ ಬಗ್ಗೆ ಕಲ್ಪನೆಯಲ್ಲಿ ಮೂಡಿದ ಕಥೆಯನ್ನೂ ಹೇಳುತ್ತಾರೆ. ಇದರಲ್ಲಿ ಲೇಖಕರ ಕಲ್ಪನೆಯಿಂದಲೇ ಕಥೆ ಕಟ್ಟುವ ರೀತಿಯನ್ನು ಗಮನಿಸಬಹುದು. ಇವರ ಕಥೆಯಲ್ಲಿ ಬಡತನದ ಬದುಕು, ಮುಗ್ಧ ಜನರ ಆಲೋಚನೆಗಳು, ಧಾರ್ಮಿಕ ನಂಬಿಕೆಗಳು, ಮಕ್ಕಳ ಮನದಲ್ಲಿ ಮೂಡುವ ಅದ್ಭುತ ಕಲ್ಪನೆಗಳು, ಹದಿಹರೆಯದವರ ಸಂಭ್ರಮ, ಆತ್ಮೀಯರ ಅಗಲುವಿಕೆಯಿಂದಾಗುವ ಪರಿಣಾಮಗಳು , ಎದುರಾಗುವ ಕಷ್ಟಗಳು, ಕುಟುಂಬದೊಳಗೆ ಹೆಣ್ಣಿಗಾಗುವ ಹಿಂಸೆ ಮನುಷ್ಯ ಸಂಬಂಧಗಳು, ಭಾವನಾತ್ಮಕ ವಿಚಾರಗಳನ್ನು ಎಲ್ಲವನ್ನು ಸಮರ್ಥವಾಗಿ ಕಥೆಗಳಲ್ಲಿ ಕಟ್ಟಿಕೊಡುತ್ತಾರೆ. ಇವರ ಬರಹ ತುಂಬ ಆಪ್ತವಾಗಿದ್ದು ನಿರೂಪಣೆಯ ಶೈಲಿಯೂ ಭಿನ್ನವಾಗಿದೆ. ಓದುಗರನ್ನೂ ತಮ್ಮ ಲೋಕಕ್ಕೆ ಕೊಂಡೊಯ್ಯುವ, ಓದಿ ಮುಗಿಯುವವರೆಗೆ ಅಲ್ಲೇ ಹಿಡಿದಿಡುವ ಶಕ್ತಿ ಈ ಕಥೆಗಳಿಗಿವೆ. ಇವರ ಬರವಣಿಗೆ ನಿರಂತರವಾಗಿ ಸಾಗುತಿರಲಿ, ಇನ್ನಷ್ಟು ಕಥೆಗಳು ಓದುಗರನ್ನು ತಲುಪಲಿ. ಸಾಹಿತ್ಯ ಲೋಕಕ್ಕೆ ಇಂಥ ಉತ್ತಮ ಕೃತಿಗಳನ್ನು ನೀಡುವಂತಾಗಲಿ. ****** ಚೇತನಾ ಕುಂಬ್ಳೆ

ಪುಸ್ತಕ ಸಂಗಾತಿ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ವಿಮುಕ್ತೆ ಪುಸ್ತಕ: ವಿಮುಕ್ತೆ ಲೇಖಕರು: ಓಲ್ಗಾ ಅನುವಾದಕರು: ಅಜಯ್ ವರ್ಮ ಅಲ್ಲೂರಿ      ‘ವಿಮುಕ್ತ’ ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ ಓಲ್ಗಾ ಅವರ ಬಹುಚರ್ಚಿತ ಕೃತಿಗಳಲ್ಲಿ ಒಂದು. ಓಲ್ಗಾ ಎಂಬ ಹೆಸರಿನಿಂದಲೇ ದೇಶದಾದ್ಯಂತ ಗುರುತಿಸಿಕೊಂಡಿರುವ ಪೋಪೂರಿ ಲಲಿತ ಕುಮಾರಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ, ಚಿಂತಕಿ, ಅನುವಾದಕಿ, ಹಾಗೂ ಮಹಿಳಾ ಹಕ್ಕುಗಳ ಹೋರಾಟಗರ್ತಿಯಾಗಿರುವ ಇವರು ಪ್ರಸ್ತುತ ತೆಲುಂಗಾಣದ ಸಿಕಂದ್ರಾಬಾದಿನಲ್ಲಿ ನೆಲೆಸಿದ್ದಾರೆ. ಸ್ವೇಚ್ಛ, ನೀಲಿ ಮೇಘಾಲು, ರಾಜಕೀಯ ಕಥಲು, ಮಾಕು ಗೋಡಲು ಲೇವು, ಪ್ರಯೋಗಂ, ವಿಮುಕ್ತ ಇವು ಇವರ ಬಹುಚರ್ಚಿತ ಕೃತಿಗಳು. ಈ ವಿಮುಕ್ತ ಕೃತಿ ಹಲವು ಭಾಷೆಗಳಲ್ಲಿ ಅನುವಾದಗೊಂಡಿವೆ.  ಡಾ. ಸುಪ್ರಿಯ ಎಂ. ಅವರು ಇದನ್ನು ಮಲಯಾಳಕ್ಕೆ ಅನುವಾದ ಮಾಡಿದ್ದಾರೆ.         ಅಜಯ್ ವರ್ಮಾ ಅಲ್ಲೂರಿ ಅವರು ಈ ಕಥಾ ಸಂಕಲನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಜ್ಞಾನದ ವಿದ್ಯಾರ್ಥಿಯಾದ ಅಜಯ್ ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರಿನವರು. ಕ್ರೈಸ್ಟ್ ಕಾಲೇಜಿನ ಬೇಂದ್ರೆ ಕಾವ್ಯ ಸ್ಪರ್ಧೆ, ಅ ನ ಕೃ ಕಥಾ ಸ್ಪರ್ಧೆಗಳಲ್ಲಿ ಬಹುಮಾನಿತರು. ಗಗನ ಸಿಂಧು (ಕವಿತೆಗಳು), ಡಯಾನ ಮರ (ಅಲೆಹಾಂದ್ರಾ ಪಿಜಾರ್ನಿಕ್ ಸ್ಪಾನಿಶ್ ಕವಿತೆಗಳ ಕನ್ನಡಾನುವಾದ), ಕಲಲ ಇನ್ನೀಟ ಪಾಟ ( ವಿಭಾ ಅವರ ಕವಿತೆಗಳ ತೆಲುಗು ಅನುವಾದ) ಅವರ ಪ್ರಕಟಿತ ಕೃತಿಗಳು. ಕಳೆದ ಎರಡು ಮೂರು ವರ್ಷಗಳಿಂದೀಚೆ ಅನುವಾದ ಕ್ಷೇತ್ರದಲ್ಲಿ ಗಂಭೀರವಾಗಿ ತೊಡಗಿಸಿಕೊಂಡಿದ್ದಾರೆ. ಸದ್ಯ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ  ಎಂ.ಎಸ್ಸಿ (ಭೌತಶಾಸ್ತ್ರ) ಓದುತ್ತಿದ್ದಾರೆ.            ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯಲ್ಲಿ ಒಟ್ಟು ೬ ಕಥೆಗಳಿವೆ. ವಾಲ್ಮೀಕಿ ರಾಮಾಯಣದಲ್ಲಿ ಬರುವ ಶೂರ್ಪನಖಿ, ಅಹಲ್ಯೆ, ರೇಣುಕ, ಮಂಡೋದರಿ ಊರ್ಮಿಳೆಯ ಪಾತ್ರಗಳು ಒಮ್ಮೆ ಮಿಂಚಿ ಮರೆಯಾಗುವುದಾದರೂ ಹಲವು ಕಾರಣಗಳಿಂದ ಓದುಗರ ಮನದಾಳದಲ್ಲಿ ಬೇರೂರಿ ನಿಂತಿವೆ. ರಾಮಾಯಣದಲ್ಲಿ ಅಮುಖ್ಯವಾಗಿ ಪರಿಗಣಿಸಲಾದ ಈ ಪಾತ್ರಗಳನ್ನು  ಓಲ್ಗಾ ಅವರು ತಮ್ಮ ಕಥೆಗಳಲ್ಲಿ ಕೇಂದ್ರ ಪಾತ್ರಗಳಾಗಿ ಆಯ್ದುಕೊಂಡು ಅವುಗಳಿಗೊಂದು ಅಸ್ಥಿತ್ವವನ್ನು ನೀಡುವ ಪ್ರಯತ್ನ ಮಾಡುತ್ತಾರೆ. ಈ ಪಾತ್ರಗಳೆಲ್ಲವೂ ಕಥಾ ನಾಯಕಿ ಸೀತೆಯೊಡನೆ ಬೇರೆ ಬೇರೆ ಕಾಲಘಟ್ಟಗಳಲ್ಲಿ ಸಂವಾದಿಸುತ್ತವೆ.  ಹಾಗೆ ಸೀತೆಯೊಂದಿಗಿನ ಭೇಟಿಯಲ್ಲಿ ಆ ಪಾತ್ರಗಳು ತಮ್ಮ ಅಂತರಂಗವನ್ನು ತೆರೆದು ತೋರಿಸುತ್ತವೆ.  ಅವುಗಳಿಂದ ಸೀತೆ ಹಲವು ಹೊಸ ವಿಚಾರಗಳನ್ನು ತಿಳಿದುಕೊಳ್ಳುತ್ತಾಳೆ. ಆ ಹೊಸ ಅರಿವಿನ ಬೆಳಕು ಕೊನೆಗಾಲದಲ್ಲಿ ಆಕೆಯನ್ನು ಮುನ್ನಡೆಸುತ್ತದೆ. ರಾಮನಿಂದ ಪರಿತ್ಯಕ್ತಳಾದ ಸೀತೆ ವಾಲ್ಮೀಕಿ ಆಶ್ರಮದಲ್ಲಿ ಮಕ್ಕಳ ಬೆಳವಣಿಗೆಯನ್ನು ಕಾಣುತ್ತಾ ಅವರ ಸಂಭ್ರಮದಲ್ಲಿ ತನ್ನ ಖುಷಿಯನ್ನು ಅರಸುತ್ತಿರುತ್ತಾಳೆ. ಅದೇ ಸಂದರ್ಭದಲ್ಲಿ ಈ ಪಾತ್ರಗಳನ್ನು ಭೇಟಿಯಾಗುವ ಅವಕಾಶ ಸಿಗುತ್ತದೆ. ಈ ಕಥೆಗಳ ಶೀರ್ಷಿಕೆಗಳೂ ಅರ್ಥಪೂರ್ಣವಾಗಿದ್ದು ಆಕರ್ಷಣೀಯವಾಗಿದೆ.          ಮೊದಲ ‘ಸಮಾಗಮ’ ಕಥೆಯಲ್ಲಿ, ಲವಕುಶರ ನಿಮಿತ್ತ ಸೀತೆ ಮತ್ತು ಶೂರ್ಪನಖಿಯರ ಅನಿರೀಕ್ಷಿತ ಭೇಟಿ ನಡೆಯುತ್ತದೆ. ತನ್ನ ಸೌಂದರ್ಯವನ್ನು ಕಳಕೊಂಡು ಇತರರ ಅವಮಾನ, ಪರಿಹಾಸ್ಯ, ನಿಂದನೆಗೆ ಗುರಿಯಾದ ಶೂರ್ಪನಖಿ ನೋವುಗಳನ್ನು ಮರೆಯಲು ಪ್ರಕೃತಿಯನ್ನು ಪ್ರೀತಿಸತೊಡಗುತ್ತಾ ತನ್ನೊಳಗಲ್ಲೂ ಸೌಂದರ್ಯ ಪ್ರಜ್ಞೆಯನ್ನು ಬೆಳೆಸಿಕೊಳ್ಳುತ್ತಾಳೆ. ನಿಸರ್ಗದ ಸೌಂದರ್ದಲ್ಲಿ ಖುಷಿಯನ್ನು ಅರಸುತ್ತಾ, ಹೂದೋಟವನ್ನು ಬೆಳೆಸುವ ಮೂಲಕ ಹೊಸ ಬದುಕನ್ನು ಕಟ್ಟಿಕೊಳ್ಳುತ್ತಾಳೆ. ಇಲ್ಲಿ ಬಾಹ್ಯ ಸೌಂದರ್ಯಕ್ಕಿಂತಲೂ ಅಂತರಂಗದ ಸೌಂದರ್ಯವೇ ಮಿಗಿಲೆಂದು ಲೇಖಕಿ ಪ್ರತಿಪಾದಿಸುತ್ತಾರೆ.   ‘ಮೃಣ್ಮಯನಾದ’ ಕಥೆಯಲ್ಲಿ ತನ್ನದಲ್ಲದ ತಪ್ಪಿಗೆ ಗಂಡನಿಂದಲೇ ಶಾಪಕ್ಕೊಳಗಾಗಿ ಕಲ್ಲಾಗಿ ಯುಗಗಳ ಕಾಲ ರಾಮನ ಪಾದ ಸ್ಪರ್ಶಕ್ಕಾಗಿ ಕಾದು ಶಾಪ ವಿಮೋಚನೆ ಪಡೆದ ಅಹಲ್ಯೆಯನ್ನು ಕಾಣಬಹುದು. ವನವಾಸದ ಕಾಲದಲ್ಲಿ ಸೀತೆಯು ಅಹಲ್ಯೆಯನ್ನು ಭೇಟಿಯಾಗುತ್ತಾಳೆ.  ತನ್ನ ಜೀವನಾನುಭವದಿಂದ ತಿಳಿದುಕೊಂಡ ವಿಚರಾಗಳನ್ನು ಅಹಲ್ಯೆ ಹಂಚಿಕೊಳ್ಳುವಾಗ “ವಿಚಾರಣೆ ಮಾಡುವುದೆಂದರೇನು ಸೀತಾ?  ಅಪನಂಬಿಕೆ ತಾನೆ! ಅದಕಿಂತಲೂ ಯಾವುದೋ ಒಂದು ನಂಬಿಕೆಯೇ ಲೇಸಲ್ಲವೇ? ಎಂಬ ಮಾತು ಆ ಕ್ಷಣಕ್ಕೆ ಅರ್ಥವಾಗದಿದ್ದರೂ ಮುಂದೊಂದು ದಿನ ಸೀತೆಗೆ ಅಗ್ನಿಪರೀಕ್ಷೆ ಸಂದರ್ಭದಲ್ಲಿ ಮನವರಿಕೆಯಾಗುತ್ತದೆ. ಮುಂದೆ ಬಸುರಿಯಾಗಿದ್ದಾಗ ಮತ್ತೊಮ್ಮೆ ಅಹಲ್ಯೆಯೊಡನೆ ಮಾತನಾಡುತ್ತಾಳೆ. ಆಗ ಸೀತೆ ಆಕೆಯ ಮಾತುಗಳಿಂದ ತನ್ನನ್ನು ತಾನು ಅರಿತುಕೊಳ್ಳುತ್ತಾಳೆ. ಅದನ್ನೇ ಮುಂದೊಂದು ದಿನ ರಾಮನಿಗೂ ಹೇಳುತ್ತಾಳೆ. “ನಾನು ಭೂಪುತ್ರಿ ರಾಮಾ, ನಾನು ಯಾರೆಂದು ಈಗ ಅರಿತುಕೊಂಡಿದ್ದೇನೆ. ಈ ಇಡೀ ಲೋಕವೆಲ್ಲ ನನ್ನದೇ. ಯಾವ ಕೊರತೆಯೂ ಇಲ್ಲ ನನಗೆ, ನಾನು ಭೂಪುತ್ರಿ” ಎಂದು ಹೇಳುತ್ತಾ ಮಕ್ಕಳನ್ನು ರಾಮನಿಗೊಪ್ಪಿಸಿ ಎಲ್ಲಾ ಬಂಧನಗಳಿಂದಲೂ ಮುಕ್ತಳಾಗಲು ಬಯಸುತ್ತಾಳೆ. ‘ಮರಳ ಮಡಕೆ’  ಕಥೆಯಲ್ಲಿ, ಒಬ್ಬ ಗಂಡಸನ್ನು ನೋಡಿ ಚಂಚಲಗೊಂಡದ್ದಕ್ಕೆ ಗಂಡನಾದೇಶದಂತೆ ಮಗನಿಂದ ಶಿಕ್ಷೆಗೊಳಗಾದ ರೇಣುಕೆಯದ್ದೇ ಪ್ರಧಾನ ಪಾತ್ರ. ಗಂಡ ಮಕ್ಕಳಿಂದ ದೂರವಾಗಿ ಏಕಾಗ್ರತೆಯಿಂದ ಶಿಲ್ಪಗಳನ್ನು ತಯಾರಿಸುತ್ತಾ ಆ ಕಲೆಯನ್ನು ಮತ್ತೊಬ್ಬರಿಗೆ ಕಲಿಸುತ್ತ ಹೊಸ ಬದುಕು ಕಟ್ಟಿಕೊಂಡ ರೇಣುಕೆ “ಗಂಡಂದಿರ ಕುರಿತು, ಮಕ್ಕಳ ಕುರಿತು ನನಗೆ ಗೊತ್ತಿದ್ದಷ್ಟು ಮತ್ತಾರಿಗೂ ಗೊತ್ತಿಲ್ಲ” ಎಂಬ ಅನುಭವಜನ್ಯವಾದ ಮಾತು ಸೀತೆಗೆ ಮೊದಲು ಅರ್ಥವಾಗದಿದ್ದರೂ ಮುಂದೆ ಪರಿಸ್ಥಿತಿಯೆ ಆಕೆಗದನ್ನು ಅರ್ಥಮಾಡಿಸುವುದು ವಿಪರ್ಯಾಸ. ‘ವಿಮುಕ್ತೆ’ ಕಥೆಯಲ್ಲಿ, “ಎಲ್ಲ ದುಃಖಗಳಿಗೂ ಮೂಲ ಕಾರಣ ಅಧಿಕಾರವೇ ಅಕ್ಕಾ” ಎಂದು ಹೇಳುವ ಊರ್ಮಿಳೆ ಯಾರ ಅಧಿಕಾರಕ್ಕೂ ಅಧೀನಳಾಗದೆ, ಅಧಿಕಾರದಿಂದ ಯಾರನ್ನೂ ಬಂಧಿಸಲು ಪ್ರಯತ್ನಿಸದೆ ಮುಕ್ತಳಾಗಲು ಬಯಸುತ್ತಾಳೆ. ಏಕಾಂತ ಮತ್ತು ಧ್ಯಾನದಲ್ಲೇ ತನ್ನ ನೆಮ್ಮದಿ, ಪ್ರೀತಿಯನ್ನು ಅರಸುತ್ತಾಳೆ. ಈ ಸಂದರ್ಭದಲ್ಲಿ ಊರ್ಮಿಳೆಯ ಬಗ್ಗೆ ಶೀಲಾ ಭಂಡಾರ್ಕರ್ ಅವರು ಬರೆದ  ‘ತಪ್ತ ಮೈಥಿಲಿ’ ಎಂಬ ಬರಹ ನೆನಪಾಗುತ್ತದೆ. ಅದರಲ್ಲೂ ಊರ್ಮಿಳೆಯ ಅಂತರಂಗದ ಶೋಧನೆಯಿದೆ. ‘ಅಶೋಕ’  ಕಥೆಯಲ್ಲಿ ಪತಿವ್ರತೆಯರ ಸಾಲಿನಲ್ಲಿ ಗುರುತಿಸಲ್ಪಟ್ಟ ಮಂಡೋದರಿಯ ವ್ಯಕ್ತಿತ್ವದ ಪರಿಚಯವಿದೆ. ಅಶೋಕವನವು ರಾವಣ ಮಂಡೋದರಿಗೆ ನೀಡಿದ ಒಲವಿನ ಉಡುಗೊರೆ. ಅಲ್ಲಿ ಮಂಡೋದರಿ ತನ್ನ ಅಸ್ತಿತ್ವವನ್ನು ಕಂಡುಕೊಳ್ಳುತ್ತಾಳೆ. ಅದು ಆಕೆಯ ಧ್ಯಾನ ಮಂದಿರವೂ ಆಗಿರುತ್ತದೆ. ಅಲಂಕಾರಗಳನ್ನು ಮಾಡುವುದರಲ್ಲೇ ಜೀವನೋತ್ಸಾಹವನ್ನು ಕಾಣುವ ಮಂಡೋದರಿ ತನ್ನ ಆಚಾರ ವಿಚಾರ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬರುವುದನ್ನು ಕಾಣಬಹುದು. ಹಾಗೇ ರಾವಣ ತಪ್ಪು ಹಜ್ಜೆಗಳನ್ನಿಡುವಾಗಲೆಲ್ಲ ಆತನನ್ನು ಸದಾ ಎಚ್ಚರಿಸುವ  ಮಂಡೋದರಿ, ರಾವಣ ಸತ್ತಾಗ,  ಆರ್ಯ ಧರ್ಮದ ವಿಧವೆಯರಂತೆ ಬದುಕಲು ಒಪ್ಪದೆ ಸದಾ ಸರ್ವಾಲಂಕಾರಭೂಷಿತಳಾಗಿರಲು ಬಯಸುತ್ತಾಳೆ. “ಈ ಮಂಡೋದರಿ ಆರ್ಯ ಧರ್ಮಗಳನ್ನು ಅನುಸರಿಸಿ ನಿರಲಂಕಾರಿಯಾಗುವವಳಲ್ಲ. ವೈಧವ್ಯವನ್ನು ಹೊಂದುವವಳಲ್ಲ” ಎಂದು ಪ್ರತಿಭಟಿಸುತ್ತಾಳೆ. ಕುಮಾರಸ್ವಾಮಿ ತೆಕ್ಕುಂಜ ಅವರು ‘ಮಂಡೋದರಿಯ ಪಾತ್ರವನ್ನಿಟ್ಟುಕೊಂಡು ಕಾದಂಬರಿ ಬರೆದಿದ್ದಾರೆ. ಹಾಗೆಯೇ ಭಾಗ್ಯರೇಖಾ ದೇಶಪಾಂಡೆ ಅವರೂ ಮಂಡೋದರಿ ಪಾತ್ರವನ್ನು ಆಳವಾಗಿ ಅಭ್ಯಸಿಸಿ ಒಂದು ಕಾದಂಬರಿಯನ್ನು ನೀಡಿರುವುದು ಗಮನಾರ್ಹ. ‘ಬಂಧಿತ’ ಕಥೆಯಲ್ಲಿ, ರಾಜನಾಗಿ,  ಪ್ರಜಾಪಾಲಕನಾಗಿ ಅಧಿಕಾರ ಕರ್ತವ್ಯಗಳ ಮಧ್ಯೆ ಸಿಲುಕಿ ನಲುಗಿ ಹಲುವು ವಿಚಾರಗಳಲ್ಲಿ ಬಂಧಿತನಾಗಿ, ಕುಟುಂಬ, ಸಂಬಂಧ ಪ್ರೀತಿ ಎಲ್ಲದರಿಂದಲೂ ದೂರ ನಿಂತು ತನ್ನನ್ನು ತಾನೇ ಬಂಧನಕ್ಕೊಳಪಡಿಸಿಕೊಂಡು ಪ್ರಜೆಗಳಿಗಾಗಿ, ಆರ್ಯ ಧರ್ಮದ ಉಳಿವಿಗಾಗಿ ಬದುಕಿದ ರಾಮನಿದ್ದಾನೆ.           ಓಲ್ಗಾ ಅವರು ‘ಸೋದರಿತ್ವವೇ ಮಹಿಳೆಯರ ವಿಮೋಚನೆಯ ಪರಿಣಾಮಕಾರಿ ವಿಧಾನ ಎಂದು ದೃಢವಾಗಿ ನಂಬಿದವರು” ಆದ್ದರಿಂದಲೇ ಈ ಸೋದರಿತ್ವದ ಭಾವನೆ ಇಲ್ಲಿನ ಕಥಾ ಪಾತ್ರಗಳಲ್ಲಿ ಗಮನಿಸಬಹುದು. ಸೀತೆ ಭೇಟಿಯಾಗುವ ಎಲ್ಲಾ ಸ್ತ್ರೀ ಪಾತ್ರಗಳು ಈ ಭಾವನೆಯನ್ನು ಬೆಳೆಸಿಕೊಂಡಿದೆ. ಇವರ ಜೀವನ ಅನುಭವಗಳ ಮಾತಿನಿಂದ ಸೀತೆಯೂ ಸತ್ಯಾಸತ್ಯಗಳ ನಡುವಿನ ವಿಚಾರಗಳನ್ನು ತಿಳಿದುಕೊಂಡು ಎಲ್ಲ ಬಂಧನಗಳಿಂದಲೂ ಹೊರಗೆ ಬಂದು ಸ್ವತಂತ್ರಳಾಗಿಬಿಡುತ್ತಾಳೆ. ಸಮಾಜದಲ್ಲಿ ಪುರುಷನಿಂದ ಗುರುತಿಸಿಕೊಳ್ಳುವ ಆಕೆ ನಿಜದ ಅರಿವಾದಾಗ ತಾನು ಕೇವಲ ಭೂಪುತ್ರಿಯಾಗಿ ಉಳಿಯುವ ದಿಟ್ಟ ತೀರ್ಮಾನ ಕೈಗೊಳ್ಳುವುದು ಶ್ಲಾಘನೀಯ.  ಹೀಗೆ ಓಲ್ಗಾ ಅವರು ಈ ಪಾತ್ರಗಳ ಮೂಲಕ ಹೊಸತೊಂದು ಲೋಕವನ್ನು ನಮ್ಮ ಮುಂದೆ ತೆರೆದಿಡುತ್ತಾರೆ. ಆ ಲೋಕವನ್ನು ಪ್ರವೇಶಿಸಿದ ಓದುಗಾರಿಗೆ ಅಲ್ಲಿ ಹಲವು ಅಚ್ಚರಿಗಳೂ ಕಾದಿರುತ್ತದೆ.  ಅಜಯ್ ಅವರ ಅಲಂಕಾರಗಳಿಲ್ಲದ ನೇರ ಮತ್ತು ಸರಳವಾದ ಭಾಷೆ, ಕಥಾ ನಿರೂಪಣೆ, ಎಲ್ಲವೂ ಓದುತ್ತಾ ಹೋದಂತೆ ಆಪ್ತವಾಗಿಬಿಡುತ್ತದೆ. ಈ ಕಥೆಗಳೆಲ್ಲವೂ ಬಹಳ ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ.           ಪಲ್ಲವ ಪ್ರಕಾಶನದಿಂದ ಪ್ರಕಟಗೊಂಡ ಈ ಸಂಕಲನಕ್ಕೆ ಬಿ. ಎನ್ ಸುಮಿತ್ರಾಬಾಯಿ ಅವರು ಮುನ್ನುಡಿ ಬರೆದಿದ್ದಾರೆ. ಇದರಲ್ಲಿ ಓ ಎಲ್ ನಾಗಭೂಷಣಸ್ವಾಮಿ ಅವರ ಅಭಿಪ್ರಾಯವೂ ಇದೆ.  “ಇದು ಪೌರಾಣಿಕ ನಾಯಕಿಯರ ಅಂತರಂಗದ ಅಷ್ಟೇ ಅಲ್ಲ ರಾಮನಂಥವರ ಒಳತೋಟಿಗಳನ್ನೂ ಆಳಕ್ಕಿಳಿದು ಗ್ರಹಿಸಿದೆ” ಎನ್ನುವ ವೈದೇಹಿಯವರು ಇದಕ್ಕೆ ಬೆನ್ನುಡಿ ಬರೆದಿದ್ದಾರೆ.  ಅಜಯ್ ಅವರು ಓಲ್ಗಾ ಅವರೊಂದಿಗೆ ನಡೆಸಿದ ಸಂದರ್ಶನವನ್ನು ಕೊನೆಯ ಭಾಗದಲ್ಲಿ ಹಂಚಿಕೊಂಡಿರುವುದರಿಂದ ಅವರ ಬಗ್ಗೆ ತಿಳಿದುಕೊಳ್ಳಲು ಓದುಗರಿಗೆ ಸಹಕಾರಿಯಾಗಿದೆ.  ಇದು ಒಂದು ಅನುವಾದಿತ ಕೃತಿಯಾಗಿದ್ದರೂ ಆ ಭಾವನೆ ಬರಂದಂತೆ ತುಂಬ ಮುತುವರ್ಜಿಯಿಂದ ಸ್ವಂತಿಕೆಯನ್ನುಳಿಸಿಕೊಂಡು ಅಜಯ್ ಅನುವಾದಿಸಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಉತ್ತಮ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಓಲ್ಗಾ ಅವರನ್ನು ಕನ್ನಡಿಗರಿಗೂ ಪರಿಚಯಿಸಿದ್ದಕ್ಕೆ ಕೃತಜ್ಞತೆಗಳು. ಇಂತಹ ಉತ್ತಮ ಕೃತಿಗಳನ್ನು ಅನುವಾದ ಮಾಡುತ್ತಿರಿ ಕನ್ನಡಿಪರಿಚಯಿಸುತ್ತಿರಿ. ನಿಮ್ಮ ಬರವಣಿಗೆಯೂ ನಿರಂತರವಾಗಿರಲಿ. ******** ಚೇತನಾ ಕುಂಬ್ಳೆ

ಪುಸ್ತಕ ಸಂಗಾತಿ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಕವಿ ಏಕತ್ವದ ಸಂಕೇತವಾದರೆ, ಕತೆಗಾರ/ಕತೆಗಾರ್ತಿ ಬಹುತ್ವದ ಪ್ರತಿನಿಧಿ ಇವತ್ತು ಕನ್ನಡದ ಕತೆಗಾರ್ತಿ ಡಾ.ವೀಣಾ ಶಾಂತೇಶ್ವರ ಅವರ ಸಮಗ್ರ ಕಥನ‌ ಸಾಹಿತ್ಯ ಓದಲು ತೆಗೆದುಕೊಂಡ ಪುಸ್ತಕ ‌.ಇದರಲ್ಲಿ‌ ನಾ ಓದೊದ ಮೊದಲ ಕತೆ‌ ಕವಲು ಸಂಕಲನದ‌ ” ಹನುಮಾಪುರದಲ್ಲಿ ಹನುಮಂತ ಜಯಂತಿ. ಹಾಗೂ ಹೋಟೆಲ್ ಬ್ಲೂ.ಹನುಮಾಪುರದಲ್ಲಿ ಹನುಮ‌‌ ಜಯಂತಿ …ಜಾತಿ ಸಂಘರ್ಷದ ಸಣ್ಣ ಝಲಕ್ ಹಿಡಿದಿಡುವ ಕತೆ.‌ ಒಂದು ಗ್ರಾಮದ ಚಲನೆ ಶಿಕ್ಷಣ ಕಲಿತು ಬಂದ ಯುವಕನಿಂದ ಹೇಗೆ ಸಾಧ್ಯವಾಗುತ್ತದೆ ಹಾಗೂ ಸಂಬಂಧಗಳು ಹೇಗಿರುತ್ತವೆ..ಜಾತೀಯ ವ್ಯವಸ್ಥೆ ಆಯಾಮವನ್ನು ಕತೆಗಾರ್ತಿ ತೆರೆದಿಡುವ ರೀತಿ ಅದ್ಭುತವಾದುದು. ೧೯೭೬ ರಲ್ಲಿ ಈ ಸಂಕಲನ ಬಂದಿದೆ.‌೧೯೬೮ ರಲ್ಲಿ ಅವರ ಮುಳ್ಳುಗಳು ಕತೆ ಪ್ರಕಟವಾದುದು.ಆಗಲೇ ವೀಣಾ ಶಾಂತೇಶ್ವರ ಅವರ ಕತೆಯ ಶೈಲಿ, ದಿಟ್ಟತನ, ಕತೆ ಕಟ್ಟುವ ರೀತಿಯ ‌, ಹೆಣ್ಣಿನ‌ ಅಂತರಂಗವನ್ನು ಪ್ರಾಮಾಣಿಕವಾಗಿ, ಕಲಾತ್ಮಕವಾಗಿ ಕಟ್ಟುವ ವೀಣಾ ಅವರನ್ನು ಶಾಂತಿನಾಥ ದೇಸಾಯಿ, ಪಿ.ಲಂಕೇಶ್, ಆಲನಹಳ್ಳಿ ಕೃಷ್ಣ, ಬರಗೂರು ರಾಮಚಂದ್ರ ಅವರು ಮೆಚ್ಚಿ ಬರೆದಿದ್ದಾರೆ.ಅವರ ಕವಲು ಸಂಕಲನದ ಕತೆಗಳನ್ನು ‌ಓದಲು ಎತ್ತಿಕೊಂಡಾಗ, ಇವತ್ತಿನ ಬರಹಗಾರ್ತಿಯರು ಮುದ್ದಾಂ ‌ಓದಬೇಕು. ಅಬ್ಬಾ ವೀಣಾ ಶಾಂತೇಶ್ವರ ಅವರ ಧೈರ್ಯ ನನಗೆ ಇಷ್ಟವಾಯಿತು.‌ ಇವತ್ತಿನ ಕರ್ನಾಟಕಕ್ಕೆ ಅಂತಹ ಶಕ್ತಿಯುತ, ಸತ್ವಯುತು ಬರಹ ಪ್ರಕಟಿಸುವ ಧೈರ್ಯ ಇದೆಯಾ ಅಂತ ಅನ್ನಿಸಿತು ನನಗೆ. ಪ್ರಶ್ನಿಸುವ ಮನೋಭಾವವೇ ಹೊರಟು ಹೋಗುತ್ತಿದೆ. ಇಲ್ಲಿ ಕಾಯಿಲೆ ನೆಪದಲ್ಲಿ ಒಪ್ಪಿತ ಗುಲಾಮಗಿರಿ ಹೇರುವ ಮತ್ತು ಅದನ್ನು ಒಪ್ಪಿಸುವ ಮನಸ್ಥಿತಿಯ ಕರ್ನಾಟಕದಲ್ಲಿ ನಾವಿದ್ದೇವೆ.ಹನುಮಾಪುರದಲ್ಲಿ ಹನುಮ ಜಯಂತಿ ಇವತ್ತಿಗೂ ಪ್ರಸ್ತುತ ಎನಿಸುವ ಕತೆ.ಇನ್ನೂ ” ಹೋಟೆಲ್ ಬ್ಲೂ ” ೧೯೭೬ ರಲ್ಲಿ ಬಂದ ಸಂಕಲನ.‌ಎಮರ್ಜನ್ಸಿ ಪ್ರಾರಂಭದ ಕಾಲ.‌(೧೯೭೬-೭೭). ಬದುಕಿನ ಹತ್ತು ಹಲವು ಆಯಾಮಗಳನ್ನು ಏಕಕಾಲಕ್ಕೆ ಈ ಕತೆ ಹೇಳುತ್ತದೆ. ರಾಜಕೀಯ, ಭ್ರಷ್ಟಾಚಾರ, ಜಾತೀಯತೆ, ಸಾಹಿತ್ಯ, ಪ್ರಶಸ್ತಿಯ ರಾಜಕೀಯ, ಜಾತಿ ಸ್ವಜನ ಪಕ್ಷಪಾತ, ಮದ್ಯ, ಕಳ್ಳಸಾಗಾಟ, ಸೂಳೆಗಾರಿಕೆ ದಂಧೆ, ಗುಂಡು ಪಾರ್ಟಿಗಳು…ಪ್ರತಿಭಟನೆ, ಸ್ತ್ರೀ‌ಶೋಷಣೆ ….ಇಷ್ಟೆಲ್ಲಾ ಆಯಾಮಗಳನ್ನು ಒಂದೇ ಕತೆಯಲ್ಲಿ ಹೇಳುವ ಕಲಾತ್ಮಕತೆ ವೀಣಾ ಶಾಂತೇಶ್ವರ ಅವರಿಗೆ ಸಾಧ್ಯವಾಗಿದೆ. ಬದುಕಿನ ಬಹುತ್ವವನ್ನು…ಅನೇಕ ಮನಸ್ಥಿತಿಗಳನ್ನು ಕತೆಗಾರ್ತಿ ಪಾತ್ರಗಳ ಡೈಲಾಗ್ಸ ಮೂಲಕ ಹೇಳಿಬಿಡುತ್ತಾಳೆ.ಕತೆ ಓದುತ್ತಲೇ ಒಂದು ನಾಟಕಕೀಯ ದೃಶ್ಯ ನಮ್ಮ‌‌ ಕಣ್ಮುಂದೆ ಚಲಿಸುತ್ತದೆ. ಅವರ ಮುಳ್ಳುಗಳು ಕತೆಯನ್ನು ಕನ್ನಡ ಯುವ ಬರಹಗಾರ್ತಿ ಯರು ಹಾಗೂ ಬರಹಗಾರರು ಓದಬೇಕು.ಅದ್ಭುತ ಕತೆ. ಮನದ ಚಲನೆ ಅಲ್ಲಿದೆ. ೨೪ ತಾಸುಗಳಲ್ಲಿ ಚಲಿಸುವ ಕತೆ ಅದು. ಅವಳ ಸ್ವಾತಂತ್ರ್ಯ ಧ್ವನಿಪೂರ್ಣ ಕತೆ.‌೧೯೯೪ ರಲ್ಲಿ ಬಂದ ಬಿಡುಗಡೆ ಕತೆ ಕನ್ನಡ ಕಥಾ ಸಾಹಿತ್ಯದಲ್ಲಿ ಮೈಲಿಗಲ್ಲು. ಮಹಿಳಾವಾದಿಗಳು, ಸಂಪ್ರದಾಯಸ್ಥ ಪುರುಷರು ಓದಬೇಕು. ಹೆಣ್ಣಿನ ಕನಸು ಮತ್ತು ಪುರುಷ ದೌರ್ಜನ್ಯದ ಈ ಕತೆ ಹೇಳುವ ಶೈಲಿ, ಕಥನದ ಹೊಸ ಮಾದರಿ ಅಲ್ಲಿದೆ. ಕತೆ ಸಾಗುವ ದಾರಿ ನಿಮ್ಮನ್ನ ಅಚ್ಚರಿ‌ ಗೊಳಿಸುತ್ತದೆ. ಅಂತ್ಯ ಬಂಡಾಯವೇ ಆಗಿದೆ. ಓದುಗನನ್ನು ಚಕಿತಗೊಳಿಸುತ್ತದೆ. ಅವರ ಕತೆಗಳಿಗೆ ಮಾಂತ್ರಿಕ ಶಕ್ತಿ ಇದೆ..ಈ ದೃಷ್ಟಿಯಿಂದ ಕತೆ ,ಕತೆಗಾರ್ತಿ ಬಹುತ್ವದ ಸಂಕೇತ. ‌ ಕವಿ ಬಹುತ್ವ‌ ಭಾವನೆಗಳನ್ನು ತನ್ನೊಳಗೆ ಗರ್ಭೀಕರಿಸಿಕೊಂಡು ಸರ್ವಾಧಿಕಾರಿಯಂತೆ, ಶಬ್ದಗಾರುಡಿಗನಂತೆ ಏಕತ್ರನಾಗಿ ಬರೆಯುತ್ತಾ ಸಾಗುತ್ತಾನೆ. ಬಹುತ್ವ ತನ್ನದಾಗಿಸಿಕೊಂಡ ಬೇಂದ್ರೆಯಂತೆ. ಬಹುತ್ವವನ್ನೇ ಮಾತಾಡಲು ಬಿಟ್ಟು ,ತಾನು ಕೃತಿಕಾರನಾಗಿ ಕಾನೂರು‌‌ ಸುಬ್ಬಮ್ಮ ಹೆಗ್ಗಡಿತಿಯಂತೆ ಬಹುತ್ವವೇ ಆಗುತ್ತಾರೆ ಕುವೆಂಪು.‌ ಹಾಗಾಗಿ ಕುವೆಂಪು ನನಗೆ ಬಹುತ್ವದ ಪ್ರತಿನಿಧಿ. ಬೇಂದ್ರೆ ಏಕತ್ವದ ಪ್ರತಿನಿಧಿ. ನನಗೆ ನನ್ನ ಅಪ್ತರರೊಬ್ಬರು ಹೇಳುತ್ತಿದ್ದರು ; ” ಪ್ರಯತ್ನಿಸಿದರೆ ಎಲ್ಲರೂ ಬರಿಯಬಹುದು.‌ಕತೆ ಕಷ್ಟ. ನಿನಗೆ ಕತೆ ಬರೆಯುವ ಶಕ್ತಿಯಿದೆ.‌ನೀ ಕತೆ ಬರೆಯೆಂದುಆ ಮಾತು ನನಗೆ ಈಚೆಗೆ ನಮ್ಮ ಕಥಾ ಪರಂಪರೆಯ ಹಿರಿಯರನ್ನು ಓದುವಾಗ ನಿಜ ಅನ್ನಿಸಿದೆ. ಲಂಕೇಶ್, ದೇವನೂರು, ವೀಣಾ ಶಾಂತೇಶ್ವರ, ಶಾಂತಿನಾಥ ದೇಸಾಯಿ ಅದ್ಭುತ ಕತೆಗಾರರು. ನೀವು ಸಹ ಕತೆ ಓದಿ. ಬಿಡುವಾದಾಗ.‌ ಪ್ರಶ್ನಿಸುವುದ‌ ಈ ಸಮಾಜ ಕಲಿಯುವಂತೆ ಕತೆ ಬರೆಯಿರಿ. ************** ನಾಗರಾಜ ಹರಪನಹಳ್ಳಿ

ಪುಸ್ತಕ ಸಂಗಾತಿ Read Post »

ಪುಸ್ತಕ ಸಂಗಾತಿ

ಪುಸ್ತಕ ವಿಮರ್ಶೆ

ವಿರಹಿ ದಂಡೆ ವಿರಹಿ ದಂಡೆ ( ಕವನ ಸಂಕಲನ )ಲೇಖಕ: ನಾಗರಾಜ್ ಹರಪನಹಳ್ಳಿನೌಟಂಕಿ ಪ್ರಕಾಶನಬೆಲೆ – 80 ವಿರಹಿ ದಂಡೆಯ ವಿಹಾರವ ಹೊತ್ತು…. ಪ್ರಕೃತಿಯನ್ನು ತನ್ನೊಳಗೆ ಆವಾಹಿಸಿಕೊಂಡು ಆ ಆವಾಹನೆಯಲ್ಲಿ ವಿವಿಧ ತೆರನಾದ ತುಮುಲಗಳನ್ನು ಅನುಭವಿಸಿ ಕೊಳ್ಳುವುದು ಒಂದು ಅಪರೂಪದ ಪ್ರಕ್ರಿಯೆ. ಅದು ಜಗತ್ತಿನಲ್ಲಿ ವಿಜ್ಞಾನಿ ಗಳಿಗಿಂತ ಕವಿಗಳಿಗೆ ಸುಲಭವಾಗಿ ಸಾಧ್ಯವಾಗುವಂತದ್ದಾಗಿದೆ. ಪ್ರಕೃತಿ ತನ್ನೊಳಗೆ ಅಡಗಿಸಿಕೊಂಡಿರುವಂತಹ ಸರ್ವ ಪರಿಕರಗಳೂ ಕೂಡ ಕವಿಯ ಆಸ್ತಿಯಂತೆ. ತನ್ನ ಕಲ್ಪನೆಗೆ ಅನುಭವಕ್ಕೆ ಬೇಕಾದಾಗ ಪ್ರಕೃತಿಗೆ ಹಾಗೂ ಪ್ರಕೃತಿಯ ವಸ್ತುಗಳಿಗೆ ಬಣ್ಣ ಕೊಟ್ಟಿಕೊಳ್ಳುವ ಕವಿ ಅಸಮಾನ್ಯನೇ ಸರಿ. ಆದರೂ ಎಲ್ಲರಿಗೂ ಪ್ರಕೃತಿಯೊಡನೆ ಒಂದಾಗುವುದು, ವರ್ಷಾನುಗಟ್ಟಲೆ ಮಾತಿಗಿಳಿಯುವುದು ಕಷ್ಟಕರವೇ. ಅಂತಹ ಕಷ್ಟಪರರ ಆಚೆ ನಿಂತು ತನ್ನ ಐಚ್ಛಿಕದ ಪ್ರಪಂಚದಲ್ಲಿ ಆಪ್ತ ಭಾವಗಳ ಬಲೆಯೊಳಗೆ ತನ್ನನ್ನೂ, ತನ್ನದನ್ನೂ ಹಾಗೂ ತನ್ನವರನ್ನು ಬರಸೆಳೆದ ಕವಿ ನಾಗರಾಜ ಹರಪನಹಳ್ಳಿಯವರು. ಅವರ ಎರಡನೇ ಕವನ ಸಂಕಲನ ವಾದ “ವಿರಹಿ ದಂಡೆ” ಯೊಂದಿಗೆ ವಿಹಾರದ ವಿವರಗಳ ಹೊತ್ತು ನಲಿದ ಸಂತ್ರಪ್ತ ಕ್ಷಣವಿದು ಚಂದ. ಕವನ ಸಂಕಲನದ ” ವಿರಹಿ ದಂಡೆ” ಶೀರ್ಷಿಕೆಯೇ ಆಕರ್ಷಣೀಯ. ‘ವಿರಹ ನೂರು ತರಹ’ ಎಂಬ ಸಿನಿಮಾದ ಹಾಡಿನ ಸಾಲಿನಂತೆ ಜಗದ ಎಲ್ಲರನ್ನೂ ಬೆಂಬಿಡದೆ ಒಮ್ಮೆಯಾದರೂ ಕಾಡುವ ವಿರಹಿತನದ ಸುಂದರವಾದ ಗುಟುಕನ್ನು ಮೆದುವಾಗಿ ಗಂಟಲಿಗಿಳಿಸಿಕೊಂಡಿದ್ದಾನೆ ಕವಿ. ಪ್ರಕೃತಿಯನ್ನೇ ಹೆಣ್ಣಾಗಿಸಿ, ಹೆಣ್ಣನ್ನೇ ಪ್ರಪಂಚದ ಸುಂದರ ಜೀವರೂಪಿಯಾಗಿ ಆರಾಧಿಸುವ ಕವಿತ್ವಕ್ಕೊಂದು ಸಲಾಂ ಸಲ್ಲಿಸಲೇಬೇಕು. ಆ ಮಗ್ಗಲು ಬದಲಿಸಿ ಪ್ರಕೃತಿಯನ್ನು ಬೊಗಸೆಯಲ್ಲಿ ಹಿಡಿದು ಗಾಳಿ, ಮಳೆ, ಬೆಳಕು, ಸಮುದ್ರದ ದಂಡೆಗಳೆಲ್ಲವನ್ನೂ ಆಟಿಕೆಯಂತೆ ಅನುಭವಿಸುವ ಕವಿಯ ತುಂಟತನ, ಪ್ರೀತಿಯನ್ನು ಬರೀ ಕಣ್ಣುಗಳಿಗೆ ಮಾತ್ರ ಸೀಮಿತವಾಗಿಸದೆ, ಕನಸುಗಳಲ್ಲಿ ಮಾತಾಡುವ ಪ್ರೀತಿ, ಪ್ರಣಯವನ್ನು ಪಕ್ಕಕ್ಕಿಟ್ಟು, ನಿಸರ್ಗ ಸಿದ್ಧವಾದ ಮಿಲನ ಮೈಥುನವನ್ನು ಬರೀ ಹೆಣ್ಣು-ಗಂಡಿಗೆ ಮಾತ್ರ ಸೀಮಿತವಾಗಿಸದೇ ಗಿಡ- ಮರಗಳಿಗೂ, ದಂಡೆ -ಕಡಲಿಗೂ ಕಂಡಲ್ಲಿ ಕಂಡಷ್ಟು ಪ್ರಕೃತಿಗೆ ಮಿಲನದ ಕಾತುರವಾಗುವ ಪುಣ್ಯಕಾಲವನ್ನು ಕವಿ ಎದೆಯೊಳಗೆ ತುಂಬಿಕೊಂಡಿದ್ದಾನೆ. ತನ್ನ ಪ್ರೀತಿಯ ಪರಾಕಾಷ್ಠೆಯನ್ನು ತುಂಬಾ ವಿಸ್ತಾರವಾಗಿ, ಬಾಹ್ಯವಾಗಿ ಅವಲತ್ತು ಕೊಂಡಿದ್ದು ಪ್ರೀತಿಯನ್ನು ಸದಾ ರಸಿಕತೆಯಲ್ಲಿ ಕಂಡ ಕವಿಗೆ ವಿರಹವನ್ನ ಸರಳ ಸುಲಭವಾಗಿ ಅನುಭವಿಸಲಾಗದು. ಸಾನಿಧ್ಯಕ್ಕೆ ಮುದ್ದಾಡಿದ, ಹೊರಳಾಡಿದ ಸುಖದ ತುತ್ತ ತುದಿಯ ಕೂಗಾಟ, ಬಿಸಿಯುಸಿರ ಉನ್ಮಾದದ ಯಾವುದೋ ಸುಖದಲ್ಲಿ ಕಳೆದುಹೋಗುವ ಕವಿಗೆ ವಿರಹ ಎಂಬುದೊಂದು ಮರೀಚಿಕೆಯೇ ಆಗಿರುವಾಗ ಒಮ್ಮೊಮ್ಮೆ ಕ್ಷಣಿಕ ವಿರಹವನ್ನು ಎದುರಿಸುವುದು ಕೂಡಾ ಅಸಾಧ್ಯವಾದ ಮಾತೇ ಆಗಿದೆ. “ಭೂಮಿಯ ಬಿರುಕಿಗೆ ಬೆರಳಿಡುವೆ” ಕವಿತೆ ಸಾಕೆನಿಸುವಷ್ಟು ಶೃಂಗಾರವನ್ನು ತುಂಬಿಕೊಂಡಿದ್ದು, ರಸಿಕತೆಯ ಅನುಭವಿಸಿದ ಅವಕಾಶವಾದಿಗಳಿಗೆ ಏನೇನನ್ನೋ ಒಳಗೊಳಗೆ ಅನಿಸುವಷ್ಟು , ನಿರೀಕ್ಷಿಸುತ್ತಿರುವವರಿಗೆ ಆಸೆ ಹುಟ್ಟಿಸುವಂತಹ ಗಟ್ಟಿತನದ ಕವಿತೆ. ಸೃಷ್ಟಿಯ ಒಂದು ಮಿಲನದ ನೋಟವನ್ನು ಆಪ್ತ ಪದಗಳಿಂದ ಔಚಿತ್ಯ ಪೂರ್ಣವಾಗಿ ಓದುವವರಿಗೆ ಉಣಬಡಿಸುವ ಕಲೆಯೊಂದು ಕವಿಗೆ ಕರಗತವಾದಂತಿದೆ. ಕವಿತೆಯ ಕೊನೆಯಲ್ಲಿ “ಭೂಮಿಯ ಬಿರುಕಿಗೆ ಬೆರಳಿಡುವುದೆಂದರೆಗೆಲ್ಲುವುದು ಸೋಲುವುದು ಶರಣಾಗುವುದು ಒಂದಾಗುವುದುಉಳಿದದ್ದು?ಉಳಿದದ್ದು ಏನು ಇಲ್ಲ…!!ಭೂಮಿಯ ಎದುರು ಮತ್ತೆ ಮತ್ತೆ ಧ್ಯಾನಿಸುವುದು….” ಕವಿಯ ಈ ಕಲ್ಪನೆಯು ತೀರಾ ಆಪ್ತವಾಗಿ ಮನತಟ್ಟುತ್ತದೆ. ದೈನಿಕದಲ್ಲಿ ಬಹುತೇಕರು ರಾತ್ರಿ ಕನಸಿನಲ್ಲಿ ಕಾಣುವ ವಾಸ್ತವವಲ್ಲದಾದರೂ ಕ್ಷಣಿಕ ವಾಸ್ತವ ಎನಿಸುವ, ಆಪ್ತವೂ ದೂರವೂ ಆದಂತಹ ಕನಸು ಮತ್ತು ಮನಸ್ಸಿನ ತೊಯ್ದಾಟಗಳು, ಮಲಗಿದ್ದಾಗ ಕನಸು ಅನಾವರಣವಾಗುವ ಬಗೆ, ಅದರಲ್ಲಿ ದನಿಯೊಂದು, ಮುಖವೊಂದು, ಸ್ಥಳ ಇನ್ನೊಂದು ಆದರೆ ಆ ಕನಸಿನಲ್ಲಿ ನಾವು ಮಾತ್ರ ಪಕ್ಕಾ. ಕನಸೇ ಹೀಗೆ ಎಂಬುದು ನನ್ನ ವಾಸ್ತವಕ್ಕೂ ಬರುವಹಾಗೆ ಕಟ್ಟಿಕೊಟ್ಟ ಕವಿತೆಯು ಸಹ ಆಪ್ತವಾಗಿ ಕೈ ಹಿಡಿದುಬಿಡುತ್ತದೆ. “ಕಣಿವೆ ತೋಳುಗಳಲಿರಭಸದಿ ಹರಿವ ನದಿಗೆಎದೆ ಕೊಟ್ಟ ಪರ್ವತ ಶೃಂಗಾರೋನ್ಮತ್ತಕಾಮೋನ್ಮಾದದಿ ಮಿಂದ ನಗ್ನ ಭೂಮಿನಗುನಗುತ್ತಾ ನಿದ್ದೆ ಹೋಗಿರಲು” ರಾತ್ರಿ ಸುರಿದ ಮಳೆ ಕವಿಯ ಕಾವ್ಯ ಪ್ರಪಂಚಕ್ಕೆ ವಿಶಿಷ್ಟವಾಗಿದೆ. ಮಳೆ ಮತ್ತು ಪ್ರಥ್ವಿಯ ಬರಪೂರಿ ಮಿಲನವನ್ನು ಕವಿ ಕಂಡು ಉಂಡು ತೇಗಿದ್ದಾನೆ ತೇಗುತ್ತಿದ್ದಾನೆ. ಭೂಮಿ ಮತ್ತು ಮಳೆಯ ನಡುವಿನ ನಂಟು ಭೂಮಂಡಲದ ಚರಾಚರ ಜೀವರಾಶಿಗಳಿಗೆ ಅವಶ್ಯಕ. ಅದಕ್ಕೆ ಗಂಡು ಹೆಣ್ಣಿನ ಮಿಲನದಂತೆ ಹೋಲಿಕೆ ನೀಡಿ ಕವಿತೆಯ ಕೊನೆಯಲ್ಲಿ “ಬೆವರುಂಡ ಗದ್ದೆಗಳು ಹಸಿರಾದವು” ಎಂದು ಸತ್ಯವನ್ನೇ ಅರುಹಿದರೂ ಆ ತುಂಟತನದ ಸಾಲುಗೊಂದು ಸೋಜಿಗದ ಚಪ್ಪಾಳೆ ಸೇರಲೇ ಬೇಕು. “ಸುಳಿವ ಗಾಳಿ ಯಲಿಎರಡು ನಿಟ್ಟಿಸಿರುಗಳಿವೆಅವು ಪ್ರೇಮದ ಪಲ್ಲವಿಗಳಾಗಿ ಬದಲಾಗಿ ಬಿಡಲಿ “ ಈ ಸಾಲುಗಳು “ಮೌನ” ಕವಿತೆಯಲ್ಲಿ ಮಿಂದೆಳುವಾಗ ವಿರಹದ ಆಳ ಅನುಭವಕ್ಕೆ ಬರುತ್ತದೆ.” ನಿನ್ನ ದನಿ ಕೇಳದ ಭೂಮಿಗೆ ಆಕಳಿಕೆಯ ಸಮಯ” ಹೀಗೆ ವಿರಹದ ವಾರ್ತೆ ಎದೆಯೊಳಗೆ ಆರಿದ ಕೆಂಡದಲಿ ಹಸಿ ಜೋಳದ ತೆನೆಗಳನಿಟ್ಟು ಬಿಸಿ ಜೋಳದ ತೆನೆಯ ತಿನ್ನಲಾಗದ ನಿರಾಶೆಯಂತೆ ವಿರಹ ಹಾದುಹೋಗುತ್ತದೆ. ಕವನ ಸಂಕಲನದ ಪುಟಗಳಿಗೆ ಮೈಗಂಟಿಕೊಂಡ ರಾಶಿರಾಶಿ ಹನಿಗಳು ಓದುಗನ ಎದೆಯಮೇಲೆ ಇಬ್ಬನಿಯಂತೆ ಭಾಸವಾಗುತ್ತವೆ. ಅವು ಪದಕ್ಕೆ ಪದ ಸೇರಿ ಎದೆ ತಾಕಿಸಿ ಮೆಲ್ಲಗೆ ಮಾಯವಾದರೂ ಮತ್ತೆ ಬೇಕೆನಿಸುವಷ್ಟು ಸಂಜೆಯ ಕಾಂದಾ ಬಜಿಗಳಂತೆ ಅನಿಸುವವು. “ಬಯಲ ಗಾಳಿಮನೆ-ಮನಗಳ ಸುಖ-ದುಃಖ ಮಾತಾಡಿಸಿ ಹೋಯಿತು” ಯಾರದೋ ಮನೆವಾರ್ತೆಗೆ ಸಾಕ್ಷಿಯಾಗುವ ಗಾಳಿ ಕವಿಯೊಳಗೆ ಸಜೀವ ಸಹೃದಯ ವ್ಯಕ್ತಿಯಂತೆ ಭಾಸವಾಗುವ ಪರಿ ಅದ್ಭುತವಾದದ್ದು. ಒಂದು ತುಂಟತನ, ಅವ್ಯಕ್ತ ಭಾವ, ಸೂಕ್ಷ್ಮತೆಯ ಅನಾವರಣಗಳ ಅಭಿವ್ಯಕ್ತತೆಯನ್ನು ಕ್ಷಣದಲ್ಲೇ ಮೈಮನಕ್ಕೆ ಹಾಯಿಸಿ ನಿರಾಳವಾಗುವ ನಾಗರಾಜರವರ ಹನಿಗಳು ಮೋಡಿ ಮಾಡುವಂಥವುಗಳಾಗಿವೆ. “ಚಂದ್ರ ಮೈತುಂಬಿ ಬಳುಕಿದ ನಿನ್ನ ನೆನಪಾಯಿತು” ” ಬಣ್ಣದ ಸೀರೆ ತೊಟ್ಟು ಮಧುಮಗಳಂತೆ ಕಾದದ್ದೇ ಆತು ವಿರಹ ವಿರಹಕ್ಕೆ ಪ್ರೇಮ ಬರೆಯುವುದುಂಟೇ? “ ಪ್ರೇಮದ ಫಲಿತಾಂಶಗಳಲ್ಲಿ ವಿರಹವು ಒಂದು ಭಾಗ. ಕೆಲವೊಮ್ಮೆ ಅದು ಸಂಪೂರ್ಣವಾಗುವುದೂ ಕೂಡ ಇದೆ. ಆದರೆ ಇಂತಹದೇ ವಿರಹಗಳ ಒಳಗೆ ಮತ್ತೆ ಪ್ರೇಮ ವಾಗಬೇಕೆಂದು ಕಾಯುವುದು ಹೊಸತನ. ಹೀಗೆ ‘ವಿರಹಿ ದಂಡೆ’ ಕವನ ಸಂಕಲನದುದ್ದಕ್ಕೂ ಪ್ರಕೃತಿ, ಪ್ರೇಮ, ವಿರಹ, ಕನಸು, ನಿರೀಕ್ಷೆ , ಆಸೆ-ಆಕಾಂಕ್ಷೆ , ಅಮಲು, ತುಮುಲ, ಬಲ,ಸಕಲಗಳನ್ನು ತನ್ನದಾಗಿಸಿಕೊಂಡು ವಿಶೇಷ ಪದಪುಂಜದಲಿ ಅವುಗಳನ್ನು ಅಚ್ಚಾಗಿಸಿ ತನ್ನೆದೆಯ ಒಳಗೆ ವಿಶೇಷ ಇತಿಹಾಸವನ್ನೇ ಸೃಷ್ಟಿ ಮಾಡಿಕೊಂಡು ಜಾಗೃತವಾದ ಸಾಹಿತ್ಯ ಆಸಕ್ತಿಯನ್ನು ಬೆಳೆಕಾಗಿಸಬೇಕೆಂಬ ಕವಿಯ ಪ್ರಯತ್ನ ಸಫಲವಾಗಿದೆ. ತೀರಾ ಗಂಭೀರ ಶೈಲಿಯಲ್ಲಿ ಓದಿದಾಗ ಕವಿತೆಗಳು ಮುಖ ಊದಿಸಿಕೊಂಡು ಸಿಟ್ಟುಗೊಳ್ಳುತ್ತವೆ. ತೀರಾ ಒಳಗಣ್ಣಿನಿಂದ ಬಾಲ್ಯ, ಹರೆಯಗಳ ತುಂಟಾಟಗಳಿಗೆ ಅವಕಾಶವಿತ್ತು ಕವಿತೆಗಳನ್ನು ಆಸ್ವಾದಿಸುವಾಗ ಹೊಸ ತರದ ಪ್ರೇಮ, ವಿರಹ, ಪ್ರಣಯ ಇತ್ಯಾದಿಗಳ ಹಿತವಾದ ಪರಿಧಿಯೊಂದು ಮನಸ್ಸಿನ ಪರದೆ ಸರಿಸಿ ನಸುನಗುತ್ತದೆ. ಒಟ್ಟಾರೆಯಾಗಿ ಕಾವ್ಯ ಪ್ರಪಂಚಕ್ಕೆ ವಿರಹವನ್ನೂ ಸಲಿಗೆಯಾಗಿ ಒಲವಾಗಿ ಉಣಬಡಿಸುವ ಕವಿಯ ಪ್ರಯತ್ನ ಅದ್ಬುತವಾದಂತದ್ದು. ******* ಮೋಹನ್ ಗೌಡ ಹೆಗ್ರೆ

ಪುಸ್ತಕ ವಿಮರ್ಶೆ Read Post »

ಪುಸ್ತಕ ಸಂಗಾತಿ

ವಿಮರ್ಶೆ

ದೇವರದೇನು ದೊಡ್ಡಸ್ತಿಕೆ ಬಿಡು ನನ್ನ ಗಂಡನ‌ ಮುಂದ (ಆನಂದ ಕಂದರ ಪದ್ಯವೊಂದರ ಅನ್ವಯಿಕ ವಿಮರ್ಶೆ) ನಲ್ವಾಡುಗಳು ಆನಂದ ಕಂದರ(ಬೆಟಗೇರಿ ಕೃಷ್ಣಶರ್ಮರ) ಕವಿತಾ ಸಂಕಲನ. ಹೊಸಗನ್ನಡದ ಶ್ರೇಷ್ಠ ಸಂಕಲನಗಳಲ್ಲೊಂದು.ಇ ದರಲ್ಲಿ‌ ಇಪ್ಪತ್ತೊಂದು ಗೀತಗಳಿವೆ.ಇವುಗಳನ್ನು ಜನಪದ ಪ್ರೀತಿಗೀತಗಳು ಎಂದು ಅವರೇ ಕರೆದಿದ್ದಾರೆ.ಹೆಸರೇ ಹೇಳುವಂತೆ ಸಂಕಲನದ ತುಂಬ ಇರುವದು ಹಳ್ಳಿಗರ ಪ್ರೀತಿ‌ಲೋಕವೇ.ಜಾನಪದ ಮುಗ್ಧ ಗಂಡು ಹೆಣ್ಣುಗಳ ಸಹಜ ಪ್ರೀತಿ,ಅವರ ದಾಂಪತ್ಯ ಅಲ್ಲಿನ ಸಹಜ ಸುಂದರ ಲೋಕ ಈ ಕವಿತೆಗಳ ವಸ್ತು.ಗಂಡು ಹೆಣ್ಣು ಪರಸ್ಪರ ಆಕರ್ಷಣೆಗೊಳಗಾಗುವ ಚಿತ್ರದಿಂದ ಹಿಡಿದು ಅವರ ಮದುವೆ, ಸುಂದರ ದಾಂಪತ್ಯ, ಗಂಡನನ್ನು ಬಿಟ್ಟು ತವರಿಗೆ ಬಂದ ಹೆಣ್ಣುಮಗಳ ವಿರಹ,ಗಂಡನ‌ ಪ್ರೀತಿ‌, ಇನ್ನಿತರ ಹೆಂಗಳೆಯರ ಗಂಡ ಬೆನ್ನು ಹತ್ತಿದಾಗ ಹೆಣ್ಣುಮಗಳು ಪಡುವ ನೋವು,ಹಳ್ಳಿಯ ಹಬ್ಬ ಜಾತ್ರೆಗಳ ಚಿತ್ರ,ತಮ್ಮ ಊರನ್ನು ಜನಪದ ಹೆಣ್ಣುಮಗಳು ಚಿತ್ರಿಸುವ ವೈಭವ ಹೀಗೆ ಅಪ್ಪಟ ಜಾನಪದಿಯ ಲೋಕವೊಂದನ್ನು ಕಟ್ಟಿಕೊಡುವ ಈ ಸಂಕಲನ ಕನ್ನಡದ ಒಂದು ಅಪರೂಪದ ಸಂಕಲನವಾಗಿದೆ.ಈ ಸಂಕಲನದೊಳಗಿನ ಒಂದು‌ಪದ್ಯ ‘ದೇವರ ದೇವರು ‘ ಎಂಬುದು. ದೇವರ ದೇವರು ಎಂದರೆ ದೇವರಿಗೇ ದೇವರು ಎಂದರ್ಥ. ಯಾವುದೇ ಗರತಿ ತನ್ನ ಗಂಡ ತನ್ನ‌ ಪ್ರೀತಿಯನ್ನು ಇನ್ನೊಂದು ಹೆಣ್ಣಿಗೆ ಹಂಚುವದನ್ನು ಸಹಿಸಲಾರಳು.ಗಂಡನ‌ ಅಖಂಡ ಪ್ರೀತಿಯ ಮುಂದೆ ಲೋಕದ ಯಾವ ಸಿರಿವಂತಿಕೆಯೂ ದೊಡ್ಡದಲ್ಲ.ಬಹುಶಃ ‘ನಿನ್ನ ಗಂಡ ಅಲ್ಲೊಬ್ಬಳ ಕೂಡ ನಗತಿದ್ದ ‘ ಎಂಬ ಹಿರಿಯಳೊಬ್ಬಳ ಮಾತಿಗೆ ನಕ್ಕರೆ ನಗಲೆವ್ವ ನಗಿ‌ಮುಖದ ಕ್ಯಾದಿಗಿ‌ನಾ ಮುಡಿದ ಹೂವು ಅವಳೊಂದುಗಳಿಗಿ ಮುಡಿಯಲಿ ಎಂದಿರುವ ಮಾತು ಗರತಿಯೊಬ್ಬಳ‌ ಮಾತಾಗಿರದೆ ಯಾರೋ ಪುರುಷರೇ ಬರೆದು ಸೇರಿಸಿದ ಪದ್ಯ ವಾಗಿರಬೇಕು. ಏಕೆಂದರೆ ಮದುವೆಯಾದ ಯಾವ ಹೆಣ್ಣು ತನ್ನ ಗಂಡನ ಪ್ರೇಮ ಇನ್ನೊಂದು‌ ಹಂಚಿಕೆಯಾಗುವದನ್ನು ಸಹಿಸಲಾರಳು. ದೇವರ ದೇವರು ಕವಿತೆ ಹೀಗೆ ಆರಂಭವಾಗುತ್ತದೆ. ದೇವರದೆಂತಾ ದೊಡ್ಡಸ್ತಿಕೆ ಬಿಡು‌ನನ್ನ ಗಂಡನ ಮ್ಯಾಲನನ್ನ ಹೊರತು ಇನ್ನೊಂದು ಹೆಣ್ಣ ಮ್ಯಾಲಿಲ್ಲ ಅವಗ ಖ್ಯಾಲ ಹೀಗೆ ತನ್ನಗಂಡನೇ ಶ್ರೇಷ್ಠ ಎನ್ನುವ ಹೆಣ್ಷುಮಗಳು ಆತ ಏಕೆ ಶ್ರೇಷ್ಠ ಎನ್ನುವದನ್ನು ಮುಂದಿನ ಪದ್ಯ ಭಾಗದಲ್ಕಿ ವಿವರಿಸುವದು ಬಹು ಸುಂದರವಾಗಿದೆ. ಬ್ರಹ್ಮ‌ ನಮ್ಮ ಪರಂಪರೆಯ ಕಥೆಗಳ ಪ್ರಕಾರ ಲೋಕದ ಸೃಷ್ಟಿಕರ್ತ.ಆದರೆ ಆತನಿಗೆ ಸರಸ್ವತಿಯೊಬ್ಬಳೇ ಹೆಂಡತಿಯಲ್ಲ,ಮೂವರೊಂದಿಗೆ ತನ್ನ ಪ್ರೀತಿಯನ್ನು ಆತ ಹಂಚಿಕೊಂಡವನೆಂದು ಜನಪದ ಗರತಿಗೆ ಕೋಪ.ಅಂತೆಯೇ ಆಕೆ ಬ್ರಹ್ಮದೇವನು ಬಹಳ ಹಿರಿಯನಂತಬುದ್ದಿ ಐತೆ ಅವಗ?ಮೂರುಜನಾ ಹೆಂಡರು ಬೇಕಾತ್ಯಾಕಪ್ರೀತಿಯ ಬಗಿ ಹ್ಯಾಂಗ? ಮೂರು‌ ಜನರೊಂದಿಗೆ ಹಂಚಿಕೊಂಡ ಪ್ರೀತಿ ಪ್ರೀತಿಯೇ? ಇದು ಅವಳ ಪ್ರಶ್ನೆ.ಹೃದಯದಲ್ಲಿ ಜಾಗ ಇರುವದೇ ಒಬ್ಬಳಿಗೆ. ಹೆಚ್ಚು ಜನ ಹೇಗೆ ನಿಂತಾರು? ಒಬ್ನಳು ಹೃದಯದಲ್ಲಿ ನೆಲೆಸಿದ ಮೇಲೆ ಇನ್ನಿಬ್ಬರು ನಿಟ್ಟುಸಿರು ಹಾಕುತ್ತಾ ಇರಲೇಬೇಕಲ್ಲವೆ? ತುಂಬ ವಾಸ್ತವಿಕ ಪ್ರಶ್ನೆ ಎತ್ತುವ ಗರತಿಯ ಪ್ರಶ್ನೆ ವೈಜ್ಞಾನಿಕವಾಗಿದೆ.ಒಂದೇ ಸಮಯಕ್ಕೆ ಇಬ್ಬಿಬ್ಬರಿಗೆ ಹೃದಯದಲ್ಲಿ ಜಾಗ ಕೊಡುವ ಗಂಡು ಇರಬಹುದೇ? ರಾಮ ರಾಮನಂತ ಹೊಗಳೆ ಹೊಗಳತಾರರಾಮನೇನು ಸುದ್ದಯಾರಮಾತ ಕೇಳಿ ಪ್ರೀತಿಯ ಸತಿಯನಅಡವಿಗೆ ಅಟ್ಟಿದ್ದ ವಾವ್ ! ಗರತಿಯ ಪ್ರಶ್ನೆಗೆ ವಾಲ್ಮಿಕಿಯೂ ನಿರುತ್ತರ! ಹೌದು, ತುಂಬು ಬಸಿರಿ ಸೀತಯನ್ನು ಕಾಡಿಗೆ ಕಳಿಸಿದ್ದು ಎಂಥ ಮಾನವೀಯ ನಡೆ? .ಅದಕ್ಜೆ ಲಕ್ಷ್ಮೀಶ ಕವಿ ” ಕರುಣಾಳು ರಾಘವ ನಲಿ ತಪ್ಪಿಲ್ಲ” ಎಂದು ವ್ಯಂಗ್ಯವಾಡಿದ್ದು! ಆದರೆ ಸೀತೆ ಬಿಸಿಲು ಬಿಸಿಲು ಎಂದು ಕಾಡಲಿ ಬಳಲುವಾಗ ವಾಲ್ಮೀಕಿ ತಂದೆಯಾಗಿ ಕಾಯ್ದಿದ್ದನ್ನು ಸ್ಮರಿಸುತ್ತಾಳೆ. ಕೃಷ್ಣನಂತೂ ಹದಿನಾರು ಸಾವಿರ ಹೆಂಡಿರ ! ಅವನ ಬಗೆಗಂತೂ ಗರತಿಗೆ ಗೌರವ ವಿರಲು ಸಾಧ್ಯವಿಲ್ಲ. ಅಂತೆಯೇ ಕೃಷ್ಣನನ್ನು ಖೊಟ್ಟಿ ಎಂತಲೇ ಆರಂಬಿಸುತ್ತಾಳೆ. ಕೃಷ್ಣನದಂತೂ ಖೊಟ್ಟಿತನವು ನೋಡೆಷ್ಟು ಹೆಂಡರವಗ?ಹೊಟ್ಟಿ ಉರಿದ ನಾರಿಯರು ಸುಮ್ಮನ$ಬಿಟ್ಟಾರೆನು ಹಾಂಗ? ಅವರ ಹೊಟ್ಟೆಯುರಿಯೇ ಅವನ ಸುಖವನ್ನು ಸುಟ್ಟಿರಬೇಕು ಎಂದವಳ ಊಹೆ. ಶಿವನದಂತೂ ಲೋಕವೇ ಬಲ್ಲ ಕಥೆ.ತಲಿ ಮ್ಯಾಲೊ ಬ್ಬಳು,ತೊಡಿ‌ಮ್ಯಾಲೊಬ್ಬಳು! ಗೌರಿ ಎಂಥ ಚಲುವಿ! ಆದರೂ ಗಂಗೆಯನ್ನು ಶಿವ ತಂದಿಟ್ಟುಕೊಂಡದ್ದು ಗರತಿಗೆ ಅಕ್ಷಮ್ಯ ಅಪರಾಧ .ಅದಕ್ಜೇ ಆಕೆ- ಹೇಳಬ್ಯಾಡ ಶಿವನೇಳಿಗಿ ಗೌರಿಯಗೋಳು ಗೋಳಿಸಿ ಬಿಟ್ಟಾಹೇಳದೆ ಕೇಳದೇ ತನ್ಬ ಜಡಿಯೊಳಗಗಂಗಿಯ ತಂದಿಟ್ಟಾ ಗೌರಿಯ ದುರ್ದೈವಕ್ಕೆ ಮರುಗುವ ಜನಪದ ಗರತಿ ಅಂತಹ ಹೆಣ್ಣಿಗೂ ಸವತಿಯನ್ನು ತಂದ ಶಿವನನ್ನು ಜಾಲಾಡಿಸುತ್ತಾಳೆ..ಇನ್ನು ಇಂದ್ರ ನಂತೂ ದೇವಲೋಕದ ಸುಂದರಿಯರನೆಕರನ್ನು ಉಪಪತ್ನಿಯಾಗಿಸಿಕೊಂಡಿದ್ದ.ಆತನದು ಗರತಿಯ ಮಾತಿನಲ್ಲಿ “ಸೂಳೆಯರ ಮ್ಯಾಳ” ! ದೇವೆಂದ್ರನ‌ ಲೋಕಕ್ಕೆ ಗರತಿ ಕೊಟ್ಟ ಹೆಸರು! ಚಂದ್ರನ ಹಾದರದಾಟಕ್ಜೆ ಅವನ ಹೆಂಡತಿ ನಿತ್ಯ ಕಣ್ಣಿರಿಡತಿರಬೇಕು !ಎನ್ನುತ್ತಾಳೆ. ಇವರೆಲ್ಲ ದೇವರುಗಳು! ಪಾಪ ಅವರ ಹೆಂಡತಿಉರ ಬವಣೆ ಎಂತಹದು ! ಅವರಿಗಿಂತ ತಾನೇ ಪರಮ ಸುಖಿ! ಏಕೆಂದರೆ ತನ್ನ‌ಗಂಡ ಅವರ ಮುಂದೆ ಅಪ್ಪಟ ಚಿನ್ನ. ಗರತಿಯ ಮಾತು ಕೇಳಿ. ದೇವರಂತ ದೇವರ ಹೆಂಡರಿಗೂಯಾವ ಬವಣೆ ಗೆಳತೀಅವರಿಗೆಲ್ಲ ದೊರೆತಿಲ್ಲ ನನ್ಹಾಂಗಪತಿಯ ಪೂರ್ಣ ಪ್ರೀತಿ! ಆದ್ದರಿಂದಲೇ ಆಕೆಯ ಗಂಡ ದೇವರಿಗೂ‌ ಮಿಗಿಲು! ನನ್ನ ರಾಯ ಸರಿ ದೇವರ ದೇವರುನಾನು ಅವನ ಗರತಿ –ನಮ್ಮ ಬಾಳಿನಲಿ ಸ್ವರ್ಗವನ್ನು ಇಳಿಸೇತಿಅವನ ಪ್ರೀತಿ! ದೇವರಂತಹ ರಾಯನಿಗೇ ತಾನು‌ಗರತಿಯಂಬುದು ಅವಳ ಹೆಮ್ಮೆ! ಆಕೆ ಹೆಮ್ನೆ ಪಡುವದರಲ್ಲೂ ತಪ್ಪಿಲ್ಲ. ಅಂತೆಯೇ ಆಕೆ ಪ್ರಶ್ನಿಸುವದು’ ದೇವರದೆಂತಹ ದೊಡಗಡಸ್ತಿಕೆ ಬಿಡು ನನ್ನ ಗಂಡನ ಮುಂದ’ ಎಂದು! ಇಂತಹ ಅಖಂಡ ಪ್ರೀತಿಯನ್ನು ತಾವಿಬ್ಬರೇ ಹಂಚುಣ್ಣುವ ದಂಪತಿ ಜೋಡಿಗಳ ಸಂತತಿ ಸಾವಿರವಾಗಲೆಂಬುದು ಅವಳ. ಆಶಯ! ಹೆಣ್ಣಿನ ನಲಿವಿನ‌ ಜೊತೆಜೊತೆಗೆ ಗಂಡಂದಿರ ಪ್ರೀತಿಯನ್ನು ಮತ್ತೊಂದು ಹೆಣ್ಣಿನೊಂದಿಗೆ ಹಂಚಿಕೊಳ್ಳಬೇಕಾಗಿ ಬಂದ ದುರ್ದೈವಿ ಹೆಣ್ಣುಮಕ್ಕಳ ನೋವನ್ನು ಪದ್ಯ ಸೂಕ್ಷ್ಮವಾಗಿ ವಿವರಿಸಿದೆ. ಮುಂಜಾನೆ ಪ್ರೀತಿಸಿ,ಸಂಜೆ ಮದುವೆಯಾಗಿ,ಮರುದಿನ ಡೈವೊರ್ಸಗೆ ನಿಲ್ಲುವ ,ಇಂದಿನ ಅತ್ಯಾಧುನಿಕ ಮನಸುಗಳು ಇಂಥಹ ಕವಿತೆಯನ್ನು ಓದಬೇಕು.ನಲ್ವಾಡುಗಳಲ್ಲೇ ಇರುವ ಗೌಡರ ಸೊಸೆ ಎಂಬ‌ ಪದ್ಯದಲ್ಲಿ ಹೆಣ್ಣಿಗೆ ಗಂಡನ‌ ಪ್ರೀತಿಯೇ ಹಂಚಿಕೆಯಾದ ಮೇಲೆ ಯಾವ ಸಿರಿವಂತಿಕೆ ಇದ್ದರೇನು ? ಎಂದು ಪ್ರಶ್ನಿಸುವ ಸಾಲುಗಳಿವೆ.ಹೆಣ್ಣಿಗೆಗಂಡಿನ ,ಗಂಡಿಗೆ ಹೆಣ್ಣಿನ ಸಂಪೂರ್ಣ ಪ್ರೀತಿಯೊಂದೇ ಆಸರೆ ಎಂದು ಸಾರುವ ಇಂತಹ ಅಪರೂಪದ ಪದ್ಯ ಮತ್ತೆ ಮತ್ತೆ ಓದಬೇಕಲ್ಲವೇ? ********** ಡಾ ವೈ.ಎಂ.ಯಾಕೊಳ್ಳಿ

ವಿಮರ್ಶೆ Read Post »

ಪುಸ್ತಕ ಸಂಗಾತಿ

ಪರಮೂ ಪ್ರಪಂಚ

ಪರಮೂ ಪ್ರಪಂಚಕಥಾಸಂಕಲನಲೇಖಕರು- ಇಂದ್ರಕುಮಾರ್ ಎಚ್.ಬಿಇಂಪನಾ ಪುಸ್ತಕ ವೃತ್ತಿಯಿಂದ ಶಿಕ್ಷಕರಾಗಿರುವ ಇಂದ್ರಕುಮಾರ್ ಅವರು ನಾಡಿನ ಪ್ರಮುಖ ಕಥೆಗಾರರಲ್ಲಿ ಒಬ್ಬರು. ಮೊನ್ನೆಯಷ್ಟೇ ಅವರ ಕಥೆಯೊಂದು ‘ ಸೂಜಿದಾರ ‘ ಎಂಬ ಹೆಸರಿನಲ್ಲಿ ಸಿನೆಮಾ ಆಗಿದೆ. ‘ಆ ಮುಖ’, ‘ನನ್ನ ನಿನ್ನ ನೆಂಟತನ’, ‘ಪರಮೂ ಪ್ರಪಂಚ’ ಮತ್ತು ‘ಕಾಣದ ಕಡಲು’ ಅವರ ಕಥಾಸಂಕಲನಗಳು.‘ಮೃದುಲಾ’,’ ಹುಲಿಕಾನು ‘ ಅವರ ಪ್ರಕಟಿತ ಕಾದಂಬರಿಗಳು. ಈ ಕಥಾಸಂಕಲನದಲ್ಲಿ ಒಟ್ಟು ಹತ್ತು ಕಥೆಗಳಿವೆ. ಗಿಫ್ಟ್ – ಇಪ್ಪತ್ತು ವರ್ಷಗಳ ನಂತರ ಸಂತೆಯಲ್ಲಿ ಸಿಕ್ಕ ಇಬ್ಬರು ಪ್ರೇಮಿಗಳ ಕಥಾನಕ. ಇಲ್ಲಿ ಅವರು ನಮ್ಮನ್ನೂ ಸಂತೆಯಲ್ಲಿ , ತುದಿಗಾಲಲ್ಲಿ ನಿಲ್ಲಿಸಿ ಅವರು ತೀವ್ರ ಭಾವದಿಂದ ಕಥೆ ಹೇಳುತ್ತಾರೆ. ಅವಳ ಸಂಗ- ಇದು ಕಾಟಲಿಂಗೇಶಪ್ಪ ಎಂಬ ವ್ಯಕ್ತಿ, ಅವಳು ಮತ್ತು ಅಲ್ಲಾಭಕ್ಷಿ ಎಂಬ ಟೇಲರರ ಕಥೆ. ಬಹಳ ವಿಭಿನ್ನವಾದ ಕಥಾನಕವಿದು. ಇದರ ಅಂತ್ಯವನ್ನು ಊಹಿಸುವುದು ಕಷ್ಟ. ಇಷ್ಟ ಗಂಧ- ತಡೆಯಲಾರದಷ್ಟು ದುರ್ಗಂಧ ಹೊತ್ತ ಹಾಲೇಶಪ್ಪನ ಕಥೆಯಿದು. ಸದಾ ನೆಗಡಿಯಿಂದ ಮೂಗು ಕಟ್ಟಿಕೊಂಡಿರುವ ಅಮೀರ್ ಜಾನ್ ನ ಸೈಕಲ್ ಶಾಪ್ ಮುಂದೆ ಇವನಿಗೆ ಆಶ್ರಯ ತಾಣವಾಗುತ್ತದೆ. ಇಂತಹ ಹೊತ್ತಿನಲ್ಲಿಯೇ ಅವನ ಬದುಕಿಗೆ ಆಗಮಿಸುವ ಹೆಣ್ಣಿನಿಂದ ಕಥೆ ಅನೂಹ್ಯ ತಿರುವು ಪಡೆಯುತ್ತದೆ. ಹೊರೆ – ರಘುವೀರ ಮತ್ತು ಲಲಿತಾಕ್ಷಿಯ ಪುಟ್ಟ ಕುಟುಂಬಕ್ಕೆ ಆಗಮಿಸುವ ದಿನಕರಜ್ಜ ; ಅವರ ಪುಟ್ಟ ಮಗು ಚಿಂಟೂ ಹಾಗೂ ಕೊನೆಗೆ ಇಡೀ ಮನೆಯನ್ನು ಆವರಿಸಿಕೊಳ್ಳುವ ಪರಿ ಅನನ್ಯ. ಪರಮೂ ಪ್ರಪಂಚ- ಪರಮು ಮತ್ತು ಮೃಣಾಲ ಗೆಳೆಯರು. ಆ ವಿಶ್ವಾಸದಿಂದಲೇ ಮೃಣಾಲನ ಮನೆಯನ್ನು ತನ್ನ ಮನೆ ಎಂದೇ ಭಾವಿಸಿ ಜೀವಿಸುವ ಮನುಷ್ಯ ಪರಮು.ಆದರೆ ಒಂದು ಪ್ರಸಂಗದಲ್ಲಿ ಮೃಣಾಲನ ತಾಯಿ ಇವನನ್ನು‘ ಪಾಪ ಅನಾಥ ಹುಡುಗ, ಮೃಣಾಲನ ಫ್ರೆಂಡ್ ‘ ಎಂದು ಪರಿಚಯಿಸಿ ಮತ್ತೆ ಅವನ ಅನಾಥ ಪ್ರಜ್ಞೆ ಕೆಣಕಿ ನಮ್ಮನ್ನೂ ಕಾಡುವ ಕಥೆಯಿದು. ವಿಸರ್ಜನೆ – ಹೆಣ್ಣೊಬ್ಬಳು ಗಂಡನನ್ನು ಶೋಷಿಸುವ ವಿಭಿನ್ನ ಕಥೆ. ಹೊಟ್ಟೆಯ ಮತ್ತು ಕಾಮದ ಹಸಿವನ್ನು ನಿಯಂತ್ರಿಸಲಾಗದ ಶಿವರಾಜನ ಕಥೆ. ಗ್ರಹಣ ಒಂದು ಥ್ರಿಲ್ಲರ್ ಕಥೆ. ಉತ್ತರದ ಹುಡುಕಾಟದಲ್ಲಿ – ಒಂದು ಸಣ್ಣ ಅವಘಡ ಮಾಡುವ ದೊಡ್ಡ ಹಾನಿಯ ಕಥೆ.ಅಣ್ಣನ ನೆನಪಲ್ಲಿ ಒಂದು ಒಳ್ಳೆಯ, ಸರಳ ಕಥೆ.ಬೇಬಿ ಸಿಟ್ಟಿಂಗ್ – ಒಂದು ಸಮಕಾಲೀನ ಆದರೆ ವಿಶಿಷ್ಟ ನಿರೂಪಣೆಯ ಚೆಂದದ ಕಥೆ.ಒಮ್ಮೆ ಓದಲೇಬೇಕಾದ ವಿಭಿನ್ನ ಕೃತಿ ‘ ಪರಮೂ ಪ್ರಪಂಚ ******** ಡಾ.ಅಜಿತ ಹರೀಶಿ

ಪರಮೂ ಪ್ರಪಂಚ Read Post »

ಪುಸ್ತಕ ಸಂಗಾತಿ

ಆಖ್ಯಾನ

ಆಖ್ಯಾನ ಆಖ್ಯಾನಲೇಖಕರು- ಮೂರ್ತಿ ಅಂಕೋಲೆಕರಕಥಾಸಂಕಲನಪ್ರಕಾಶಕರು- ಕ್ರೈಸ್ಟ್ ವಿಶ್ವವಿದ್ಯಾಲಯ ಕನ್ನಡ ಸಂಘ ಜೀವ ವಿಮಾ ನಿಗಮದ ಅಧಿಕಾರಿಯಾಗಿ ಈಗ ನಿವೃತ್ತಿ ಜೀವನ ನಡೆಸುತ್ತಿರುವ ಮೂರ್ತಿ ಅವರು ತಮ್ಮ ಇಪ್ಪತ್ತರಿಂದ ಮೂವತ್ನಾಲ್ಕನೇ ವಯಸ್ಸಿನವರೆಗೆ ಬರೆದ ಕಥೆಗಳಲ್ಲಿ ಆಯ್ದ ಹತ್ತು ಕಥೆಗಳು ಇಲ್ಲಿವೆ. ಇದಕ್ಕೆ ಕೆ.ವಿ. ತಿರುಮಲೇಶ್ ಅವರು ಮುನ್ನುಡಿ ಬರೆದಿದ್ದಾರೆ.ನಾನಿಲ್ಲಿ ಉದ್ದೇಶಪೂರ್ವಕವಾಗಿ ಪ್ರತೀ ಕಥೆಯ ಬಗ್ಗೆ ಬರೆಯುವುದಿಲ್ಲ. ಏಕೆಂದರೆ ಇವು ಸಾಕಷ್ಟು ಸಂಕೀರ್ಣವಾಗಿ ಇದ್ದು ಒಂದೇ ಹಿಡಿತಕ್ಕೆ ಸಿಗುವಂಥವಲ್ಲ. ಇವೆಲ್ಲವೂ ಬಹಳ ಪ್ರಬುದ್ಧ ಕಥೆಗಳೆಂದು ಮಾತ್ರ ಹೇಳಬಹುದು. ಕತೆಯನ್ನು ಗಂಭೀರವಾಗಿ ಪರಿಗಣಿಸಿರುವ ಲೇಖಕನಿಗೆ ಮಾತ್ರ ಸಾಧ್ಯವಾಗುವ ಕತೆಗಳು. ಬಹುಮುಖ್ಯವಾದ ಕಥಾವಸ್ತುಗಳು, ಗಂಭೀರವಾದ ಶೈಲಿ, ಎಲ್ಲವನ್ನೂ ಗಮನಿಸುವ ಸೂಕ್ಷ್ಮತೆ, ಅವಕ್ಕೆ ಸ್ಪಂದಿಸುವ ಗುಣ, ಅದ್ಭುತವಾದ ವೈಚಾರಿಕತೆ – ಇವೆಲ್ಲವೂ ಈ ಕಥೆಗಳನ್ನು ಬಹಳ ಮೇಲ್ಮಟ್ಟದಲ್ಲಿ ಇರಿಸುತ್ತವೆ. ಅಂಕೋಲೆಕರರು ಚಿತ್ರಿಸುವ ಜಗತ್ತು- ಕರಾವಳಿ ಮತ್ತು ಘಟ್ಟದ ಮೇಲಿನ ಹಳ್ಳಿ , ಪಟ್ಟಣಗಳು. ಅಲ್ಲಿನ ಎಲ್ಲಾ ತಲೆಮಾರಿನ ಜನ, ತೋಟ, ಒಳದಾರಿಗಳು, ಕಾಡು, ತೊರೆ, ಪ್ರಕೃತಿ. ದೇವಸ್ಥಾನ, ಜಾತ್ರೆ ಮತ್ತು ಕಾಲೇಜುಗಳು. ಈ ಜನರ ಸಂಬಂಧ, ವೈಷಮ್ಯ, ಪ್ರೀತಿ ಪ್ರಣಯ, ಹಾದರ, ಅಸೂಯೆ, ಅನುರಾಗ ಇತ್ಯಾದಿ. ಆದರೆ ಅವರ ‘ ಕ್ರಿಟಿಕಲ್ ಇನ್ಸೈಡರ್ ‘ ಈ ಮೇಲಿನವುಗಳನ್ನೇ ವಿಭಿನ್ನವಾದ ದೃಷ್ಟಿಯಿಂದ ಚಿತ್ರಿಸಿದ್ದಾರೆ. ಮಾರುತಿಯವರ ಪಾತ್ರಗಳು ಹೆಚ್ಚು ತೀವ್ರತೆಯಲ್ಲಿ ಚಿಂತನ ಮಂಥನದಲ್ಲಿ ತೊಡಗುತ್ತವೆ. ಕೆಲವು ಗೊಂದಲಗಳಲ್ಲಿ ಉಳಿದರೆ , ಇನ್ನು ಕೆಲವಕ್ಕೆ ಉಪಸಂಹಾರಗಳು ತಾನಾಗಿಯೇ ಒದಗಿ ಬರುತ್ತವೆ. ಮನುಷ್ಯಾವಸ್ಥೆ ಎಂದರೆ ಇದೇನೇ ಎಂದು ಕಥೆಗಳು ತೋರಿಸಿಕೊಡುವಂತೆ ಅನಿಸುತ್ತದೆ. ಈ ಚಿಂತನೆಯ ಸ್ವಭಾವವೇ ಅವರ ಕಥಾಪಾತ್ರಗಳನ್ನು ಬಹು ಆಯಾಮಿಗಳಾಗಿ ಮಾಡುತ್ತವೆ. ಬೆನ್ನುಡಿಯಲ್ಲಿ ಶ್ರೀಧರ ಬಳಗಾರ ಅವರು ಹೇಳಿರುವಂತೆ – ಮೂರ್ತಿ ಅವರ ಕಥನ ಪ್ರಪಂಚದಲ್ಲಿ ಸ್ವಭಾವತಃ ಒಳ್ಳೆಯತನದಲ್ಲಿ ಬದುಕುವ ಅಪೂರ್ವ ಶೋಭೆಯ ಮನುಷ್ಯರಿದ್ದಾರೆ. ಆತ್ಮಶೋಧನೆಗೆ ಹಿಂಜರಿಯದ ಅವರ ಕಥೆಗಳು ನವ್ಯೋತ್ತರ ಕಥನ ಸ್ವರೂಪಕ್ಕೆ ಸೂಚಕವಾಗುವುದರಿಂದ ಕಥನ ಪರಂಪರೆಯ ಅಧ್ಯಯನ ದೃಷ್ಟಿಯಿಂದಲೂ ಮುಖ್ಯವಾಗುತ್ತವೆ. ಇವೆಲ್ಲ ಕಾರಣಗಳಿಂದ ಒಮ್ಮೆ ಓದಲೇಬೇಕಾದ ಕೃತಿ ‘ ಆಖ್ಯಾನ’.********** ಡಾ. ಅಜಿತ ಹರೀಶಿ

ಆಖ್ಯಾನ Read Post »

ಪುಸ್ತಕ ಸಂಗಾತಿ

ಘಾಚರ್ ಘೋಚರ್

ಘಾಚರ್ ಘೋಚರ್ಕಥಾಸಂಕಲನಲೇಖಕ: ವಿವೇಕ ಶಾನಭಾಗ ಏಕತ್ವ ಮನಸ್ಸಿನ ಗುಣ. ಆದರೆ, ಪ್ರತೀ ಉನ್ಮೇಷ, ನಿಮೇಷದಲ್ಲಿಯೂ ಮಗದೊಂದು ವಿಷಯ ಚಿಂತನೆಗೆ ಜಾರಬಲ್ಲ ಮನಸ್ಸು ಒಂದು ಕ್ರಮಬದ್ಧತೆಗೆ ಒಳಪಡಲು ಅಭ್ಯಾಸ ಬೇಕು. ಬದುಕು ಅದೇ ಮನೋಭ್ಯಾಸದ ಪಡಿಯಚ್ಚು‌. ಅದರ ಈ ಅಣಿಮ, ಗರಿಮಾದಿ ಗುಣಗಳ ಬಿಚ್ಚಿಡುವ ಈ ಕಥಾಸಂಕಲನ ಈ ವಿಶಿಷ್ಟ ನಿರೂಪಣೆಯಿಂದಾಗಿ ಹೃದಯವನ್ನು ಗೆಲ್ಲುತ್ತದೆ. ಒಂದು ನೀಳ್ಗತೆ, ಐದು ಕಥೆಗಳ ಸಂಗ್ರಹವಿದು. ಘಾಚರ್ ಘೋಚರ್ ನೀಳ್ಗತೆಯ ಮುಂದುವರೆದ ಭಾವವೇ ಉಳಿದ ಕಥೆಗಳು ಎಂಬ ಸುಳಿವು ಕೊನೆಯವರೆಗೂ ಓದುವಾಗ ಅನಿಸುತ್ತದೆ. ಅಬ್ಬಾ ವಿವೇಕರಿಗೊಂದು ಸಲಾಂ. ಕಥೆಯ ನಿರೂಪಣೆ, ಘಟನೆಗಳ ಎಳೆಗಳ ವಿಶ್ಲೇಷಣೆಯಲ್ಲಿ ಗೆಲ್ಲುವ, ಈ ನೀಳ್ಗತೆಯಲ್ಲಿ, ತನ್ನ ಬದುಕಿನ ಸಿಕ್ಕುಗಳ ಬಿಡಿಸಿ ಹೇಳುತ್ತಾ, ಕೊನೆಗೊಂದು ಗಂಟು ಉಳಿಸಿಯೇ ಕಥೆ ಮುಗಿಯುವುದು ಒಂದು ವಿಲಕ್ಷಣ ಯೋಚನೆಗೆ ಹಚ್ಚುತ್ತದೆ. ಓದುಗನಿಗೆ ಮುಂದಿನ ಕಥೆಯ ಆವೇಶವಾಗುವದಕ್ಕೂ ಮೊದಲು ಈ ಕಗ್ಗಂಟು ಕರಗುವುದೇ ಇಲ್ಲ… ಹೇಗೆಂದರೆ ಕಂಡಲ್ಲೆಲ್ಲಾ ಬಡಪಾಯಿ ಇರುವೆಯನ್ನು ಸಾಯಿಸುವ ಒಂದು ವಿಕ್ಷಿಪ್ತ ಮನಸ್ಥಿತಿಯನ್ನೇ ಬೆಳೆಸುತ್ತಾ ‘ಘಾಚರ್ ಘೋಚರ್’ ಎಂಬ ಒಂದು ಜೋಡಿ ಪದಗಳ ಆವಿಷ್ಕಾರವನ್ನು ಹೆಣೆಯುತ್ತಾ ಅದೇ ಅಂತ್ಯ ಎಂಬಲ್ಲಿಗೆ ಕಥನ ಮುಗಿಯುತ್ತದೆ. ಈ ಇಜ್ಜೋಡು ಪದಗಳನ್ನು ಅರಿತಿರುವ ಪ್ರಪಂಚದ ಕೆಲವೇ ಕೆಲವು ಜನರಲ್ಲಿ ನೀವೂ ಒಬ್ಬರಾಗುತ್ತೀರಿ… ಈ ಕಥೆಯ ಮೂಲಕ… ನಿರ್ವಾಣ ಕಥೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ, ಅಪರಿಚಿತ ಸ್ಥಳದಲ್ಲಿ ಒಂದು ಅಸಂಗತ ರೀತಿಯಲ್ಲಿ ಮೂರ್ತನಾಗುವ ಘಟನೆಯಿದೆ… ಇದೊಂದು ವಿಶಿಷ್ಟಪ್ರಯೋಗ. ಕೋಳಿ ಕೇಳಿ ಮಸಾಲೆ? ಕಥೆಯಲ್ಲಿ ನವಿರಾದ ವ್ಯಂಗ್ಯವು ಹಾಸ್ಯ ಎನಿಸುತ್ತಲೇ, ಒಂದು ವ್ಯವಸ್ಥೆಯ ಸೂಕ್ಷ್ಮ ಅವಲೋಕನವಿದೆ. ರಿಸ್ಕ್ ತಗೊಂಡು ಎಂಬ ಪುಟ್ಟ ಕಥೆಯಲ್ಲಿ ಸಹಜವಾದ ಕಥನದ ಹಾದಿಯ ಬದಿಗೊತ್ತಿ, ಗಂಡು- ಹೆಣ್ಣಿನ ಸಂಬಂಧ, ಮನಸ್ಥಿತಿಯ ಅನಾವರಣ ಅನನ್ಯವಾಗಿ ಮೂಡಿದೆ. ಇದೊಂದು ಸೂಜಿ ಮೊನೆಯ ಚುಚ್ಚುಮದ್ದು. ಸುಧೀರನ ತಾಯಿ ಕಥೆಯು ಭಾವನಾತ್ಮಕವಾಗಿ ಕಾಡುವ, ಕದಡುವ ಕಥೆ. ಆದರೆ, ಮನಸ್ಸಿನ ಖೇದಗಳ ಶಬ್ಧ ಕಥೆಯಲ್ಲಿ ವಾಚ್ಯವಾಗಿಲ್ಲ. ಓದುಗನಲ್ಲಿ ಧ್ವನಿಸುತ್ತದೆ. ಈ ಕಥೆಯ ಸಮಯದಲ್ಲಿ ಮನಸ್ಸು ಹದವಾಗಿ, ಕೊನೆಗೆ ಬಂದಾಗ ಒಂದು ಸುಖವಾದ ಉಸಿರು ಆಚೆ ಬರುವುದು ಅನುಭವ! ವಿಚಿತ್ರ ಕಥೆಯು ಒಂದು ವರದಿಯಂತೆ ಕಾಣುವ ಕಥನ. ಆದರೆ, ಈಗಿನ ಜಾಯಮಾನದ ವೈದ್ಯಕೀಯ ವ್ಯವಸ್ಥೆಯ ಅತಿರೇಕ ಮಾಹಿತಿಗಳ ಲೋಕದಲ್ಲಿ, ಕೇವಲ ಮನುಷ್ಯನ ತಪ್ಪು ಕೂಡ ಸಂಬಂಧಗಳ ನಡುವಿನ ರೋಗವನ್ನು ತೆರೆದಿಡುವುದು, ಒಂದು ಸಿನಿಮೀಯ ತಿರುವುಗಳನ್ನು ತರುತ್ತಾ ಸಾಗುವ ಕಥೆ.. ಇದು ಥಟ್ಟನೆ ಮುಗಿದು ಹೋಗುವುದಿಂದ ಒಮ್ಮೆ ಓದುಗ ಮನಸ್ಸಿನ ಓಟಕ್ಕೆ ಬ್ರೇಕ್ ಹಾಕಿಕೊಳ್ಳಬೇಕಾಗುತ್ತದೆ‌. ಕನ್ನಡದ ಕಥಾ ಪ್ರಪಂಚದಲ್ಲಿ ತಮ್ಮದೇ ಗುರುತು ಛಾಪಿಸಿದವರಲ್ಲಿ ವಿವೇಕ ಶಾನಭಾಗರೂ ಪ್ರಮುಖರು. ಬೇರೆ ಭಾಷೆಗಳಲ್ಲೂ ಅನುವಾದವಾಗಿರುವ ಈ ಕಥೆಯು ನಿರೂಪಣೆ, ವಿನ್ಯಾಸದಿಂದಾಗಿ ಏಕಾಏಕಿ ಮನಸ್ಸಿಗೊಂದು ಸಂಸ್ಕಾರ ತರುವುದು ಖಚಿತ. ಕಥೆ ಕಟ್ಟುವಿಕೆಯ ಅಧ್ಯಯನದ ಪಾಠ ಉಚಿತ. ಒಂದು ಉತ್ತಮ ಓದಿಗೆ ಈ ಕೃತಿ. ******************************** ಡಾ. ಅಜಿತ್ ಹರೀಶಿ ಡಾ. ಅಜಿತ್ ಹರೀಶಿ

ಘಾಚರ್ ಘೋಚರ್ Read Post »

You cannot copy content of this page

Scroll to Top