ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ligade
ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-23 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ಜಯದೇವಿ ತಾಯಿಯವರ ಜೀವನವೆಂಬ ಮಹಾಗ್ರಂಥದಲ್ಲಿ ಅವರ ಮಕ್ಕಳು ಒಂದೊಂದು ಅಮೂಲ್ಯ ಅಧ್ಯಾಯಗಳಾಗಿದ್ದರೆ…. ಮುಖ್ಯ ಪಾತ್ರಧಾರಿಯಾಗಿ ಆಗಮಿಸಿದ ಅಳಿಯ ಡಾ. ಶಂಕರಣ್ಣ ಮೂಗಿ ಸುಪ್ರೀಂ ಕೋರ್ಟಿನ ನ್ಯಾಯವಾದಿಗಳು (ನನ್ನ ತಂದೆ). ಜಯದೇವಿ ತಾಯಿಯವರ ಪಡೆದ ಹಿರಿಯ ಮಗನಾಗಿ ಪಾತ್ರವನ್ನು ವಹಿಸಿದ್ದು ಅತ್ಯಂತ ವಿಶಿಷ್ಟವಾದುದು. ತಾಯಿಯ ಬದುಕಿನ ಕಷ್ಟ-ಸುಖಗಳ ನಡುವೆ ಮಗನಾಗಿ, ತಾಯಿಯ ನೆರಳಾಗಿ, ಬೆನ್ನೆಲುಬಾಗಿ, ಮಾರ್ಗದರ್ಶಕರಾಗಿ ನಿಂತವರು.ಗಂಡನ ವಿಯೋಗದ ನಂತರ ಮನೆಯ ಜವಾಬ್ದಾರಿಗಳ  ಭಾರವು ಹೇರಿಕೊಳ್ಳಲಾರದಷ್ಟು ಭಾರವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲು ಪ್ರಾರಂಭಿಸಿದ್ದವು…. ಆ ಸಮಯದಲ್ಲಿ “ಶಿವಯೋಗಿ ಸಿದ್ದರಾಮನು ಕಳಿಸಿಕೊಟ್ಟ ಕೈಯಾಗಿ ಶಂಕರಣ್ಣನವರು.. ಬಂದರೆಂದು” ತಾಯಿ ಯಾವಾಗಲು ಹೇಳುತಿದ್ದರು. ಡಾ. ಶಂಕ್ರಣ್ಣ. ಡಿ .ಮೂಗಿ.ಸುಪ್ರೀಂ ಕೋರ್ಟ್ ನ್ಯಾಯವಾದಿಗಳು (ಸೋವಿಯತ್ ಲ್ಯಾಂಡ್ ನೆಹರು ಅವಾರ್ಡ್ ವಿಜೇತರು) ಶಂಕರ ಮೂಗಿ ಅವರದು ಬೈಲ್ಹೊಂಗಲದ ಪ್ರತಿಷ್ಠಿತ ಮನೆತನ ಹಾಗೂ ಕಿತ್ತೂರು ಇತಿಹಾಸದ ಮೊದಲ ಇತಿಹಾಸಕಾರೆಂದು ಪ್ರಸಿದ್ಧಿಗೊಂಡ ಶ್ರೀ ದೊಡ್ಡಭಾವೆಪ್ಪ ಚನ್ನಬಸಪ್ಪ ಮೂಗಿಯವರ ಮಗನಾಗಿದ್ದರು… ಕಾರಣಾಂತರದಿಂದ ಬೈಲ್ಹೊಂಗಲವನ್ನು ಬಿಟ್ಟು ಸೊಲ್ಲಾಪುರದಲ್ಲಿ ಕೆಲಸಕ್ಕಾಗಿ ಬರಬೇಕಾದ ಸಂದರ್ಭ ಬಂತು… ಸೊಲ್ಲಾಪುರದ ಗಡಿನಾಡಿನ ಮಣ್ಣಿನಲ್ಲಿ ಕನ್ನಡದ ಕಂಪು ಹರಡುತ್ತಿದ್ದ ದಿನಗಳಲ್ಲಿ, “ಜಯದೇವಿ ತಾಯಿ” ಎಂಬ ಹೆಸರೇ ಅನೇಕರ ಹೃದಯದಲ್ಲಿ ಗೌರವದ ಸ್ಥಾನ ಪಡೆದಿತ್ತು. ಕನ್ನಡ ನಾಡು, ನುಡಿ, ಸಂಸ್ಕೃತಿಯ ಮೇಲಿನ ಅವರ ಅಪಾರ ಪ್ರೀತಿ, ಸಮಾಜಸೇವೆಯಲ್ಲಿನ ಅವರ ತ್ಯಾಗ ಮತ್ತು ಸಂಕಷ್ಟಗಳ ಎದುರು ತಲೆಬಾಗದ ಧೈರ್ಯವು ಎಲ್ಲೆಡೆ ಹರಡಿತ್ತು.ಅಂತಹ ಸಮಯದಲ್ಲಿ, “ಗಡಿನಾಡಿನಲ್ಲಿ ಜಯದೇವಿ ತಾಯಿ ಎಂಬ ಕನ್ನಡತಿ ಇದ್ದಾರೆ. ನಿಷ್ಠಾವಂತೆ, ಧೈರ್ಯವಂತೆ, ಜನರ ಕಷ್ಟಗಳಿಗೆ ಸ್ಪಂದಿಸುವ ಅಪರೂಪದ ಮಹಿಳೆ” ಎಂಬ ಮಾತುಗಳನ್ನು ಕೇಳಿದ ಶಂಕರಣ್ಣನವರ ಮನಸ್ಸಿನಲ್ಲಿ ಅವರನ್ನು ಒಮ್ಮೆ ಭೇಟಿಯಾಗಬೇಕೆಂಬ ಹಂಬಲ ಮೂಡಿತು. ಶಂಕ್ರಣ್ಣ ಮತ್ತು ಲಲ್ಲೇಶ್ವರಿಯವರ ಮದುವೆ ಸಂದರ್ಭ ಒಂದು ದಿನ ಅವರು ಜಯದೇವಿ ತಾಯಿಯವರನ್ನು ಕಾಣಲು ಬಂದರು. ಮೊದಲ ಭೇಟಿಯಲ್ಲಿಯೇ ಅವರ ಸರಳತೆ, ವಿನಯತೆ, ದೃಢ ಸಂಕಲ್ಪ ಮತ್ತು ಕನ್ನಡದ ಮೇಲಿನ ಅಭಿಮಾನ ಕಂಡು ಮಂತ್ರ ಮುಗ್ಧರಾದರು.ತಾಯಿಯವರ ಮಾತುಗಳಲಿ ಬದುಕಿನ ಅನುಭವಗಳಿದ್ದವು. ಅವರ ನಗುವಿನಲ್ಲಿ  ಸೌಮ್ಯತೆ ಇತ್ತು ದೈವಿ ಖಳೆಯಿತು …..ಸಾವಿರ ನೋವುಗಳ ಗೆದ್ದ ಆತ್ಮವಿಶ್ವಾಸವಿತ್ತು.ತಾಯಿಯವರು ಸಮಾಜದ ಏಳಿಗೆಗಾಗಿ ನಡೆಸುತ್ತಿದ್ದ ಕಾರ್ಯಗಳು, ಬಡವರ ಮತ್ತು ನಿರ್ಗತಿಕರ ಪರವಾಗಿ ತೋರಿಸುತ್ತಿದ್ದ ಕಾಳಜಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಮಾಡುತ್ತಿದ್ದ ಸೇವೆಯನ್ನು ಕಂಡು ಶಂಕರಣ್ಣನವರು ತುಂಬಾ ಸಂತೋಷಪಟ್ಟರು.“ಇಂತಹ ಮಹಿಳೆಯರು ಒಂದು ಕುಟುಂಬಕ್ಕೆ‌ ಅಷ್ಟೇ ಇಡೀ ಸಮಾಜದ ಆಸ್ತಿ” ಎಂದು ಅವರು ಮನಸಾರೆ ಹೊಗಳಿದರು ಹಾಗೂ ತಾಯಿಯವರ ಕೈಜೋಡಿಸಲು ಪ್ರಾರಂಭಿಸಿದರು.ಅಂದಿನ ಭೇಟಿ  ಕನ್ನಡ ಪ್ರೀತಿ, ಸಮಾಜಸೇವೆ ಮತ್ತು ಮಾನವೀಯತೆಯ ಎರಡು ಮಹಾನ ಮನಸ್ಸುಗಳ ಸಂಗಮವಾಗಿತ್ತು.ಗಡಿನಾಡಿನಲ್ಲಿ ಕನ್ನಡದ ದೀಪವನ್ನು ಆರದಂತೆ ಕಾಪಾಡುತ್ತಿರುವ ಜಯದೇವಿ ತಾಯಿಯವರ ಜೊತೆಯಾದರು…. ಕಿರಿಯ ಮಗಳು ಲಲ್ಲೇಶ್ವರಿತಾಯಿ ಮೂಗಿ(ಲೇಖಕಿ)  ಜಯದೇವಿ ತಾಯಿಯವರ ವ್ಯಕ್ತಿತ್ವವನ್ನು ಕಂಡ ಶಂಕರಣ್ಣನವರು, “ಧೈರ್ಯ, ನಿಷ್ಠೆ ಮತ್ತು ಭಕ್ತಿ ಎಲ್ಲವು ರೂಪ ತಾಳಿದರೆ ಅದು ಜಯದೇವಿ ತಾಯಿಯವರ ರೂಪವಾಗುತ್ತದೆ” ಎಂದು ಪ್ರಶಂಸಿಸಿದ್ದರೆ ಅಚ್ಚರಿಯೇನಿಲ್ಲ. ತಾಯಿಯಲಿ ಮೂಡುತ್ತಿದ್ದ ಆತಂಕವನ್ನು ಅರ್ಥಮಾಡಿಕೊಂಡು, ಅವರ ಮನಸ್ಸಿಗೆ ಧೈರ್ಯದ ಮಾತುಗಳನ್ನು ತುಂಬುತ್ತಿದ್ದರು. ತಾಯಿಯ ಕನಸುಗಳು ಕುಸಿಯದಂತೆ, ಅವರ ಸಂಕಲ್ಪಗಳು ಮಂಕಾಗದಂತೆ ಎಚ್ಚರಿಕೆಯಿಂದ ಕಾಪಾಡುತ್ತಿದ್ದರು.ಸಾಹಿತ್ಯ ಸೇವೆಯಲ್ಲಿ ಜಯದೇವಿ ತಾಯಿಯವರು ಬೆಳಗುತ್ತಿದ್ದ ದೀಪವಾದರೆ, ಆ ದೀಪಕ್ಕೆ ಎಣ್ಣೆ ಸುರಿದು ಬೆಳಕು ಕಡಿಮೆಯಾಗದಂತೆ ನೋಡಿಕೊಂಡವರು… ಶಂಕರಣ್ಣನವರು.  ಅವರ ಹಿರಿಯ ಮಗನಂತೆ ತಾಯಿಯ ಬರಹಗಳು, ವಿಚಾರಗಳು, ಸಮಾಜಮುಖಿ ಚಿಂತನೆಗಳು ಜನರಿಗೆ ತಲುಪಲು ಬೇಕಾದ ಎಲ್ಲ ಸಹಕಾರವನ್ನು ನೀಡುತ್ತಿದ್ದರು. ತಾಯಿಯ ಪ್ರತಿಯೊಂದು ಸಾಧನೆಯನ್ನು ತಮ್ಮದೇ ಸಾಧನೆಯೆಂದು ಭಾವಿಸಿ ಹೆಮ್ಮೆಪಡುತ್ತಿದ್ದರು.ಆಸ್ತಿಯ ಸಂರಕ್ಷಣೆಯ ವಿಷಯದಲ್ಲಿಯೂ ಅವರ ಪಾತ್ರ ಅಪಾರ. ಪೂರ್ವಜರು ಕಟ್ಟಿದ ಆಸ್ತಿಯನ್ನು  ಸಂಪತ್ತು……..ಅದು ಕುಟುಂಬದ ಗೌರವ ಮತ್ತು ಪರಂಪರೆಯ ಸಂಕೇತವೆಂದು ಭಾವಿಸಿ ಅತ್ಯಂತ ಪ್ರಾಮಾಣಿಕತೆಯಿಂದ ಕಾಪಾಡಿದರು. ಅನೇಕ ಸವಾಲುಗಳು ಎದುರಾದರೂ ಧೈರ್ಯ ಕಳೆದುಕೊಳ್ಳದೆ, ವಿವೇಕದಿಂದ ಎಲ್ಲವನ್ನು ನಿರ್ವಹಿಸಿದರು. ತಾಯಿಯ  ಮಾತಿಗೆ ಓಗೊಟ್ಟು, ಬಂದ ಸಂಕಟಗಳಿಗೆ ಪರಿಹಾರವಾಗಿ ನಿಂತ ಮಗನಾದರು.ಜಯದೇವಿ ತಾಯಿಯವರ ಹೆಜ್ಜೆ ಗುರುತುಗಳು ಸಮಾಜದಲ್ಲಿ ಉಳಿಯಬೇಕೆಂಬ ಉದ್ದೇಶದಿಂದ ತಮ್ಮ ಶಕ್ತಿ, ಸಮಯ ಮತ್ತು ಜೀವನವನ್ನೇ ಸಮರ್ಪಿಸಿದ ಅಪರೂಪದ ಪಡೆದ ಪುತ್ರರಾದರು ಡಾ. ಶಂಕರಣ್ಣ ಮೂಗಿಯವರು. ತಾಯಿಯ ಜೀವನದ ರಥ ಎರಡು ಚಕ್ರಗಳ ಮೇಲೆ ಸಾಗಿದ್ದರೆ, ಒಂದು ಚಕ್ರ ತಾಯಿಯ ಅಚಲ ಸಂಕಲ್ಪವಾಗಿದ್ದರೆ, ಮತ್ತೊಂದು ಚಕ್ರ ಅವರ ಪಡೆದ ಮಗನ ನಿಸ್ವಾರ್ಥ ಸಹಕಾರವಾಗಿತ್ತು.ತಾಯಿಯ ಯಶಸ್ಸಿನ ಹಿಂದೆ ಕಾಣದ ಶಕ್ತಿಯಾಗಿ, ಮಾತಿಲ್ಲದ ತ್ಯಾಗಿಯಾಗಿ, ಅಚಲ ಬೆಂಬಲವಾಗಿ ನಿಂತ ಅವರ ಪಾತ್ರ ಸದಾ ಸ್ಮರಣೀಯ.ಅವರಂತಹ ಅಪರೂಪದ ವ್ಯಕ್ತಿ ದೊರೆತದ್ದು ನನ್ನ ಪುಣ್ಯ ವೆಂದು,…..ತಾಯಿಯವರು ಹೇಳು ವರು…ಅಂತಹ ತಾಯಿಗೆ ಸೇವೆ ಸಲ್ಲಿಸುವುದು ನನ್ನ ಭಾಗ್ಯ ಎಂದು ಶಂಕರಣ್ಣನವರು ಹೇಳುವರು…..!!! ಶಂಕರಣ್ಣನವರ ಒಡನಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಅವರ ಸರಳತೆ, ಸಜ್ಜನಿಕೆ, ಹಿರಿಯರ ಮೇಲಿನ ಗೌರವ, ಸಮಾಜದ ಬಗ್ಗೆ ಇರುವ ಕಾಳಜಿ ಹಾಗೂ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳವ ಗುಣಗಳನ್ನು ಜಯದೇವಿ ತಾಯಿಯವರು ಹತ್ತಿರದಿಂದ ಗಮನಿಸುತ್ತಿದ್ದರು.ಅವರ ಮಾತಿನಲ್ಲಿ ವಿನಯವಿತ್ತು, ನಡವಳಿಕೆಯಲ್ಲಿ ಸಂಸ್ಕಾರವಿತ್ತು, ಹೃದಯದಲ್ಲಿ ಸಾಹಿತ್ಯ ಪ್ರೇಮವಿತು.. , ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿಪ್ರಖಂಡ ಪಾಂಡಿತ್ಯವನ್ನು ಹೊಂದಿದ್ದರು ಇಂತಹ ಗುಣವಂತ ಯುವಕನನ್ನು ಕಂಡ ತಾಯಿಯವರ ಮನಸ್ಸಿನಲ್ಲಿ ಒಂದು ಆಶಯ ಮೂಡಿತು.ಒಂದು ದಿನ ಪ್ರೀತಿಯಿಂದ ಶಂಕರಣ್ಣನವರನ್ನು ಕರೆದು, “ನನ್ನ ಕಿರಿಯ ಮಗಳು ಲಲ್ಲೇಶ್ವರಿಯನ್ನು ನಿಮಗೆ ಕೊಡಲು ನನ್ನ ಮನಸ್ಸಿದೆ. ನೀವು ನಮ್ಮ ಕುಟುಂಬದ ಮಗನಾಗಬೇಕು” ಎಂದು ಹೇಳಿದರು. ತಾಯಿಯವರ ಮಾತು ಕೇಳಿದ ಶಂಕರಣ್ಣನವರ ಮುಖದಲ್ಲಿ ಸಂತಸದ ಹೊಳಪು ಮೂಡಿತು. ಅದು ಅವರಿಗೆ ಸಿಕ್ಕ ಅತ್ಯಂತ ದೊಡ್ಡ ಆಶೀರ್ವಾದವಾಗಿತ್ತು. ತಾಯಿಯವರು ಈ ವಿಷಯವನ್ನು ಲಲ್ಲೇಶ್ವರಿ ತಾಯಿಯವರ ಮುಂದೆ ಹೇಳಿದಾಗ, ತಾಯಿಯ ಮಾತೇ ದೇವರ ಮಾತು ಎಂದು ಭಾವಿಸುತ್ತಿದ್ದ ಲಲ್ಲೇಶ್ವರಿ ತಾಯಿಯವರು ವಿನಮ್ರವಾಗಿ ತಲೆಬಾಗಿದರು.*ನುಡಿಸಿದಂತೆ ನುಡೆವೆನ| ನಡಿಸಿದಂತೆ ನಡೆವೆನನೀ ಇರಿಸಿದಂತೆ ಇರುವೆನ -ನನ್ನವ್ವನಿನ್ನ ಪಾದದ ಧೂಳಿಯಾಗಿ ಹಾರೈನ||* ಎನ್ನುತ ತಮ್ಮ ಜೀವನದ ನಿರ್ಧಾರವನ್ನು ತಾಯಿಯವರ ಕೈಯಲ್ಲಿ ಇಟ್ಟಿದ್ದ ಅವರು, “ನೀವು ಹೇಳಿದಂತೆ ಆಗಲಿ ತಾಯಿ” ಎಂದು ಗೌರವದಿಂದ ಒಪ್ಪಿಗೆ ಸೂಚಿಸಿದರು. ಶುಭ ಸುದ್ದಿ ಎರಡು ಕುಟುಂಬಗಳಲ್ಲೂ ಸಂತಸದ ಅಲೆಯನ್ನು ಹರಡಿಸಿತು. ನಂತರ ಬೈಲಹೊಂಗಲದಲ್ಲಿ ಮದುವೆಯ ಸಿದ್ಧತೆಗಳು ಆರಂಭವಾದವು. ಊರಿನ ಬೀದಿಗಳು ಹಬ್ಬದ ವಾತಾವರಣದಿಂದ ಕಂಗೊಳಿಸಿದವು. ಬಂಧು-ಬಳಗ, ಸ್ನೇಹಿತರು, ಶರಣರು, ಭಕ್ತರು ಎಲ್ಲರೂ ಮದುವೆಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದರು. ಮದುವೆಯ ದಿನ ಬೈಲಹೊಂಗಲವೇ ಒಂದು ಪುಣ್ಯಕ್ಷೇತ್ರದಂತೆ ಕಂಗೊಳಿಸುತ್ತಿತ್ತು. ನಾದಸ್ವರದ ಮಧುರ ಸ್ವರಗಳು ಗಾಳಿಯಲ್ಲಿ ತೇಲುತ್ತಿದ್ದವು. ಮಂಗಳ ವಾದ್ಯಗಳ ಘೋಷದ ನಡುವೆ ವಧುವರರು ಕಲ್ಯಾಣ ಮಂಟಪಕ್ಕೆ ಆಗಮಿಸಿದರು. ಲಲ್ಲೇಶ್ವರಿ ತಾಯಿಯವರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಲಕ್ಷ್ಮೀದೇವಿಯಂತೆ ಕಂಗೊಳಿಸುತ್ತಿದ್ದರು. ಶಂಕರಣ್ಣನವರು ಗಂಭೀರತೆ ಮತ್ತು ವಿನಯದ ಪ್ರತಿರೂಪವಾಗಿ ಕಾಣುತ್ತಿದ್ದರು.ಹಿರಿಯರ ಆಶೀರ್ವಾದಗಳ ನಡುವೆ ಮಂಗಳಸೂತ್ರ ಧಾರಣೆ ನಡೆದ ಕ್ಷಣದಲ್ಲಿ ಎಲ್ಲರ ಕಣ್ಣಲ್ಲೂ ಸಂತಸದ  ಮಿನುಗಿತು. ಜಯದೇವಿ ತಾಯಿಯವರ ಹೃದಯವು ಆನಂದದಿಂದ ತುಂಬಿ ತುಳುಕಿತು. ತಮ್ಮ ಮಗಳ ಜೀವನ ಒಬ್ಬ ಸಜ್ಜನನ ಕೈಯಲ್ಲಿ ಸುರಕ್ಷಿತವಾಗಿದೆ ಎಂಬ ಸಮಾಧಾನ ಅವರ ಮುಖದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿತ್ತು.ಆ ಮದುವೆ ಕೇವಲ ಇಬ್ಬರ ಹೃದಯಗಳ…ಎರಡು ಸಂಸ್ಕಾರವಂತ ಕುಟುಂಬಗಳ , ಆದರ್ಶಗಳ ಪವಿತ್ರ ಮಿಲನವಾಗಿತ್ತು. ಬೈಲಹೊಂಗಲದ ಜನರು ಇಂದಿಗೂ ಆ ಕಲ್ಯಾಣ ಮಹೋತ್ಸವವನ್ನು ನೆನಪಿಸಿಕೊಂಡು, “ಅದು ನಿಜವಾಗಿಯೂ ದೇವರ ಅನುಗ್ರಹದಿಂದ ನಡೆದ ದಿವ್ಯ ವಿವಾಹ” ಎಂದು ಭಾವಪೂರ್ಣವಾಗಿ ಹೇಳಿಕೊಳ್ಳುತ್ತಾರೆ. ಅತಿಥಿಗಳ ಆತಿಥ್ಯವೂ ಅಷ್ಟೇ ಅದ್ದೂರಿಯಾಗಿತ್ತು. ಬಂದ ಪ್ರತಿಯೊಬ್ಬರನ್ನೂ ಗೌರವದಿಂದ ಸ್ವಾಗತಿಸಿ, ಪ್ರೀತಿಯಿಂದ ಊಟೋಪಚಾರ ಮಾಡಲಾಯಿತು. ಮದುವೆ ಮುಗಿದ ನಂತರವೂ ಹಲವಾರು ದಿನಗಳ ಕಾಲ ಬೈಲಹೊಂಗಲದ ಜನರು ಆ ವಿವಾಹದ ಬಗ್ಗೆ ಮಾತನಾಡುತ್ತಲೇ ಇದ್ದರು.“ಮದುವೆ ಅಂದರೆ ಹೀಗೆ ಇರಬೇಕು! ನಾವು ಇಂತಹ ವಿಜೃಂಭಣೆಯ ಕಲ್ಯಾಣವನ್ನು ಜೀವನದಲ್ಲಿ ನೋಡಿಲ್ಲ!” ಎಂದು ಜನರು ಹೇಳಿಕೊಳ್ಳುತ್ತಿದ್ದರು. ಆ ದಿನವನ್ನು ಕಂಡವರು ಇಂದಿಗೂ ನೆನಪಿಸಿಕೊಂಡಾಗ ಅವರ ಕಣ್ಮುಂದೆ ಹೂವಿನ ತೋರಣಗಳಿಂದ ಸಿಂಗರಿಸಲ್ಪಟ್ಟ ಬೈಲಹೊಂಗಲದ ಓಣಿ ಓಣಿಯ ತುಂಬಾ ಕಟ್ಟಿದ ಹಂದರಗಳ ನೆನಪು ಬಾರದೇ ಇರದು.. ಸತಿಪತಿಗಳ ಪವಿತ್ರ ಬಂಧವನ್ನು  ಗೌರವಿಸಿ,   ಪ್ರೀತಿ, ಕಾಳಜಿ ಮತ್ತು ಸೇವಾಭಾವದಿಂದ ನಡೆದುಕೊಂಡರು. ಸುಖದಲ್ಲೂ ದುಃಖದಲ್ಲೂ ಅವರ ನೆರಳಾಗಿ ನಿಂತು, ಪ್ರತಿಯೊಂದು ಹೆಜ್ಜೆಯಲ್ಲಿಯೂ ಜೊತೆಗಿದ್ದು, ಆದರ್ಶ ದಂಪತಿಗಳಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಿದರು.ಅವರಿಬ್ಬರ ಜೀವನವು ಪರಸ್ಪರ ತ್ಯಾಗ ಮತ್ತು ಧರ್ಮನಿಷ್ಠೆಯ ಪ್ರತೀಕವಾಗಿತ್ತು.ಜೀವನದ ಎಲ್ಲಾ ಏಳುಬೀಳುಗಳನ್ನು ಕೈಹಿಡಿದು ದಾಟಿದರು.ಅತ್ಯಂತ ವೈಶಿಷ್ಟ ಪೂರ್ಣ ಜೀವನವು ಇವರದಾಗಿತ್ತುಶಂಕ್ರಣ್ಣ ಮೂಗಿ ಹಾಗೂ ಲ‌ಲ್ಲೇಶ್ವರಿ ತಾಯಿಯವರು ಜೀವನದ ಒಂದು ಹಂತದಲ್ಲಿ ಸಂಸಾರದ ಬಂಧನಗಳನ್ನು ಮೀರಿ ಸನ್ಯಾಸತ್ವವನ್ನು ಸ್ವೀಕರಿಸಿದರು. ಆ ಬಳಿಕ ಅವರು ದಾಂಪತ್ಯ ಜೀವನದ ಭಾವನೆಗಿಂತಲೂ ಉನ್ನತವಾದ ಆಧ್ಯಾತ್ಮಿಕ ಸಂಬಂಧವನ್ನು ಅಳವಡಿಸಿಕೊಂಡರು. ಒಬ್ಬರನ್ನೊಬ್ಬರು  ತಂದೆ-ತಾಯಿಯರಂತೆ ಗೌರವದಿಂದ ಕಾಣುತ್ತಿದ್ದರು. ಲಲ್ಲೇಶ್ವರಿ ತಾಯಿಯವರು ಕೈಯಲ್ಲಿ ರುದ್ರಾಕ್ಷಿ ಕಂಕಣವನ್ನು ಕಟ್ಟಿಕೊಂಡರು.ಸಂಬಂಧದಲ್ಲಿ ಮೋಹ ಮರೆತು ಮಮತೆ, ನಿಸ್ವಾರ್ಥ ಸೇವೆಯಲಿ ತೊಡಗಿದರು. ಪರಸ್ಪರರ ಯೋಗಕ್ಷೇಮವನ್ನು ಕಾಪಾಡುತ್ತ, ತಾಯಿ ಸೇವೆಗಾಗಿ ತಮ್ಮ ಬದುಕನ್ನು ಸಮರ್ಪಿಸಿದರು.  ಅವರ ಪ್ರತಿಯೊಂದು ಹೆಜ್ಜೆಯೂ ಶರಣ ತತ್ವದ ಪ್ರತಿಬಿಂಬವಾಗಿತ್ತು.ಸನ್ಯಾಸ ಮಾರ್ಗದಲ್ಲಿ ನಡೆದು, ಭಕ್ತಿ, ಜ್ಞಾನ ಮತ್ತು ಸೇವೆಯ ಮೂಲಕ ತಮ್ಮ ಅಂತರಂಗವನ್ನು ಶುದ್ಧಗೊಳಿಸಿಕೊಂಡರು. ಅಂತಿಮವಾಗಿ ನಿರ್ವಾಣದತ್ತ ಪಯಣ ಬೆಳೆಸಿದರು. ಅವರ ಜೀವನವು ಸಂಸಾರಿಕ ಮಿತಿಯನ್ನು ದಾಟಿ, ಆತ್ಮಮದ ಶ್ರೇಷ್ಠ ಮಟ್ಟವನ್ನು ತಲುಪಿದ ಉದಾತ್ತ ಉದಾಹರಣೆಯಾಗಿದೆ. ತಾಯಿಯನ್ನೇ  ಗುರುವಾಗಿ ಸ್ವೀಕರಿಸಿ  ಶರಣರ ವೈರಾಗ್ಯವನ್ನು ಕಂಡ ಮಹಾತ್ಮರಾದರು” ಎಂದು ಭಕ್ತಿಭಾವದಿಂದ ಸ್ಮರಿಸ ಬಹುದಾಗಿದೆ.ಅವರ ಜೀವನಗಾಥೆ ಇಂದಿಗೂ ಸೇವೆ, ತ್ಯಾಗ ಮತ್ತು ಆಧ್ಯಾತ್ಮಿಕ ಸಾಧನೆಯ ಆದರ್ಶವಾಗಿ ಉಳಿದಿದೆ. *ಸತಿಪತಿಯ ಭಾವ| ತೊರೆದು ನಿರತಸತೀಶರಣ ಲಿಂಗಪತಿ ಬಾವದಿ- ರಮಿಸಿಭಕ್ತಿ ಭವನದ ವಾಸವಾದೆವು|| * ಎನ್ನುತ ನಂತರ ಬಸವಕಲ್ಯಾಣದಲ್ಲಿ ಜಯದೇವಿ ತಾಯಿಯವರೊಂದಿಗೆ ಶರಣರು ನಡೆದಾಡಿದ ಭೂಮಿಯಲ್ಲಿ ಅವರು ವಾಸವಿದ್ದು, ತಮ್ಮ ಆಧ್ಯಾತ್ಮಿಕ ಮತ್ತು ಸಾಹಿತ್ಯ ಸೇವೆಯನ್ನು ಮುಂದುವರಿಸಿದರು. *ಕರೆದ್ಧ್ಯೊದರು ಕೈಹಿಡಿದು| ಅರಮನೆ ಆಧ್ಯಾತ್ಮಚಿರ ಪರ ಪದವೀಯ ಅರಿತು ನೀಡಿ-ಪತಿದೇವ ಶರಣರ ನಿಜ ನಿವಾಸಕ್ಕೆ ಕರೆದರು ||* ಗಂಡ ಹೆಂಡಂದಿರು ಇಬ್ಬರು ಸನ್ಯಾಸತ್ವವನ್ನು ಪಡೆದು ಬಸವಭೂಮಿಯಲ್ಲಿ ನೆಲೆಸಿದರು ಸತಿಪತಿಗಳ ಜೀವನದ ಕೊನೆಯ ಅಧ್ಯಾಯವೂ ಅವರ ಬದುಕಿನಂತೆಯೇ ಸೇವೆ, ಭಕ್ತಿ ಮತ್ತು ತ್ಯಾಗದ ಸುಗಂಧದಿಂದ ತುಂಬಿಕೊಂಡಿತ್ತು. ಕಿರಿ ಮಗಳು ಮತ್ತು ಅಳಿಯನೊಂದಿಗೆ ಜಯದೇವಿ ತಾಯಿಯವರು ಅನೇಕ ವರ್ಷಗಳ ಕಾಲ ಸಮಾಜಸೇವೆ, ಶರಣ ಸಂಸ್ಕೃತಿಯ ಪ್ರಚಾರ ಮತ್ತು ಮಾನವೀಯ ಮೌಲ್ಯಗಳ ಬಿತ್ತನೆ ಮಾಡುತ್ತಾ ಬದುಕಿದರು.ಬಸವಣ್ಣನವರ ಪವಿತ್ರ ಭೂಮಿಯಾದ ಬಸವಕಲ್ಯಾಣದಲ್ಲಿ ಈ ಮಹನೀಯರು ತಮ್ಮ ಉಸಿರಿನವರೆಗೂ ಧರ್ಮದ ದಾರಿಯಲ್ಲಿ ನಡೆದರು. ಕಾಲಚಕ್ರದ ನಿಯಮದಂತೆ ದೇಹವು ಮಣ್ಣಿನಲ್ಲಿ ಲೀನವಾದರೂ, ಅವರು ಬಿತ್ತಿದ ಆದರ್ಶಗಳು ಇಂದಿಗೂ ಜೀವಂತವಾಗಿವೆ. ಬಸವಣ್ಣನವರ ಪಾವನ ಮಣ್ಣಿನಲ್ಲಿ ಈ ಮೂವರು ಮಹಾತ್ಮರು ಮಣ್ಣಲ್ಲಿ ಮಣ್ಣಾಗಿ, ಶಿವನಲ್ಲಿ ಶಿವವಾಗಿ ಲೀನರಾದರು. ಬಸವಕಲ್ಯಾಣದಲ್ಲಿ ಅವರ ಸಮಾಧಿಗಳನ್ನು ಕಾಣಬಹುದಾಗಿದೆ.ಬಸವಕಲ್ಯಾಣದಲ್ಲಿ ಅವರ ಜೀವನದ ನೆನಪುಗಳನ್ನು ಸಾರುವ ಮೂರು ಸಮಾಧಿಗಳು ಭಕ್ತರ ಕಣ್ಮನ ಸೆಳೆಯುತ್ತವೆ. ಆ ಸಮಾಧಿಗಳು  ಅವು ಅವರ ತ್ಯಾಗ, ಸೇವೆ, ಶರಣ ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳ ಜೀವಂತ ಸಾಕ್ಷಿಗಳಾಗಿವೆ.ಅಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬರ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣರ ಸಂಗಾತಿ ಸಾವಿಲ್ಲದ ಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಶಿವಶರಣ ಮಾದಾರ ಚೆನ್ನಯ್ಯನವರು ಹನ್ನೆರಡನೆಯ ಶತಮಾನದಲ್ಲಿ ನಡೆದ ಅಭೂತಪೂರ್ವ ಕ್ರಾಂತಿ ವರ್ಗ ವರ್ಣ ಲಿಂಗ ಬೇಧ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಜಗತ್ತಿನ ಸರ್ವ ಶ್ರೇಷ್ಠ ಕ್ರಾಂತಿಯಾಗಿದೆ. ಬಸವಣ್ಣನವರ ನೇತೃತ್ವದಲ್ಲಿ ನಡೆದ ಈ ಆಂದೋಲನದಲ್ಲಿ ಸಮಾಜದ ಅತ್ಯಂತ ಕಟ್ಟ ಕಡೆಯ ಮಾದಿಗ ಸಮುದಾಯದ ಚೆನ್ನಯ್ಯನು ಪಾಲ್ಗೊಂಡಿದ್ದನು. ಶಿವಶರಣ ಮಾದಾರ ಚೆನ್ನಯ್ಯನವರು 12ನೆಯ ಶತಮಾನದ ಅತ್ಯಂತ ಪ್ರಮುಖ ಶಿವಶರಣ, ಕಾಯಕಯೋಗಿ ಹಾಗೂ ಕನ್ನಡ ಸಾಹಿತ್ಯದ ಆದ್ಯ ವಚನಕಾರರಾಗಿದ್ದಾರೆ. ಭಕ್ತಿ ಮತ್ತು ಕಾಯಕ ನಿಷ್ಠೆಗೆ ಮೇರು ಶಿಖರವಾಗಿದ್ದ ಇವರನ್ನು ಜಗದ್ಗುರು ಬಸವಣ್ಣನವರೇ ತಮ್ಮ ವಚನಗಳಲ್ಲಿ ಅತ್ಯಂತ ಪೂಜ್ಯಭಾವದಿಂದ ಕೊಂಡಾಡಿದ್ದಾರೆ.  ಮಾದಾರ ಚೆನ್ನಯ್ಯನವರ ಜೀವನ ಚರಿತ್ರೆಯ ಸಮಗ್ರ ವಿವರ ಇಲ್ಲಿದೆ: ಪರಿಚಯ ಮತ್ತು ಹಿನ್ನೆಲೆ ಕಲ್ಯಾಣಕ್ಕೆ ಬಂದ ಮೇಲೆ ಮಾದಾರ ಚೆನ್ನಯ್ಯ ಎಲ್ಲಾ ಶರಣರಿಗೂ ಅಂಬಲಿ ಮಾಡಿ ಕೊಡುತ್ತಿದ್ದರು. ಭಕ್ತಿ ಮತ್ತು ಶಿವನಿಗೆ ಅಂಬಲಿ ಉಣಿಸಿದ ಪ್ರಸಂಗ ಕಾಲ್ಪನಿಕ ಕಥೆ  ಚೆನ್ನಯ್ಯನವರು ಕಾಡಿಗೆ ಹೋಗಿ ಹುಲ್ಲು ಕೊಯ್ಯುವ ಕಾಯಕದಲ್ಲಿ ತೊಡಗಿದ್ದಾಗಲೂ ಇಷ್ಟಲಿಂಗ ಧ್ಯಾನದಲ್ಲಿ ಮಗ್ನರಾಗಿರುತ್ತಿದ್ದರು. ಅವರ ನಿಷ್ಕಲ್ಮಶ ಭಕ್ತಿಗೆ ಮೆಚ್ಚಿದ ಶಿವನು ಪ್ರತ್ಯಕ್ಷನಾಗಿ, ಚೆನ್ನಯ್ಯನ ಪತ್ನಿ ತಯಾರಿಸಿದ ಅಂಬಲಿ (ರಾಗಿ ಕೂಳು) ಯನ್ನು ಪ್ರತಿದಿನ ಬಂದು ಸ್ವೀಕರಿಸುತ್ತಿದ್ದನು ಎನ್ನುವ ಪುರಾಣ  ಕಾವ್ಯಗಳು ವರ್ಣಿಸುತ್ತವೆ. ಆದರೆ ಇವುಗಳನ್ನು ತಾತ್ವಿಕ ಚಿಂತನೆಗೆ ಚೆನ್ನಯ್ಯನ ಬದ್ಧತೆ ಸೈದ್ಧಾಂತಿಕ ಸ್ಪಷ್ಟತೆ ನಿಲುವುಗಳ ಬಗ್ಗೆ ಆಶಯ ಎಂದು ಪರಿಗಣಿಸ ಬೇಕು. ಒಮ್ಮೆ ಚೋಳರಾಜನು ತಾನು ಸಿದ್ಧಪಡಿಸಿದ ಮೃಷ್ಟಾನ್ನ ಭೋಜನವನ್ನು ಶಿವನು ಸ್ವೀಕರಿಸದಿದ್ದಾಗ, ಶಿವನಿಗೆ ಕಾರಣ ಕೇಳಿದನು. ಆಗ ಶಿವನು, “ನಾನು ಪ್ರತಿದಿನ ನನ್ನ ಭಕ್ತ ಚೆನ್ನಯ್ಯನ ಅಂಬಲಿಯನ್ನು ಸವಿಯುತ್ತಿದ್ದೇನೆ, ನಿನ್ನ ರಾಜ ವೈಭವದ ಊಟಕ್ಕಿಂತ ಅವನ ಪ್ರೀತಿಯ ಕೂಳೇ ನನಗೆ ಶ್ರೇಷ್ಠ” ಎಂದು ಹೇಳಿದನು. ಈ ಮೂಲಕ ಶಿವನು ಜಗತ್ತಿಗೆ ಚೆನ್ನಯ್ಯನ ಗುಪ್ತ ಭಕ್ತಿಯನ್ನು ಪ್ರಕಟಪಡಿಸಿದನು ಎಂಬ ಪವಾಡ ಕಥೆಗಳಿವೆ. ಕಲ್ಯಾಣ ಕ್ರಾಂತಿ ಮತ್ತು ಬಸವಣ್ಣನವರ ಒಡನಾಟ ಬಸವಣ್ಣನವರ ಸಾಮಾಜಿಕ ಕ್ರಾಂತಿ ಮತ್ತು ಶರಣರ ಅನುಭವ ಮಂಟಪದ ಚಿಂತನೆಗಳಿಂದ ಆಕರ್ಷಿತರಾದ ಮಾದಾರ ಚೆನ್ನಯ್ಯನವರು ಕಲ್ಯಾಣಕ್ಕೆ (ಇಂದಿನ ಬಸವಕಲ್ಯಾಣ) ಬಂದರು. ಅಲ್ಲಿ ತಮ್ಮ ಮೂಲ ಕಾಯಕವಾದ ಪಾದರಕ್ಷೆ (ಚರ್ಮಗಾರಿಕೆ) ತಯಾರಿಕೆಯನ್ನು ಮುಂದುವರಿಸಿದರು. ಬಸವಣ್ಣನವರು ತಮ್ಮ ವಚನಗಳಲ್ಲಿ “ಎನ್ನ ದೆಸೆಯಿಂದ ಮಾದಾರ ಚೆನ್ನಯ್ಯನ ಮನೆಯು …” ಎಂದು ಹೇಳಿಕೊಳ್ಳುತ್ತಾ, ಚೆನ್ನಯ್ಯನವರನ್ನು ತಮಗಿಂತ ಶ್ರೇಷ್ಠ ಭಕ್ತರೆಂದು ಗೌರವಿಸುತ್ತಿದ್ದರು. ಮಾದಾರ ಚೆನ್ನಯ್ಯನ ಮನೆಯಲ್ಲಿ ಉಂಡ ಕಾರಣ ವೇದ ನಡುನಡುಗಿತ್ತು ಎಂದು ಹೇಳಿದ್ದಾರೆ ಬಸವಣ್ಣನವರು. ವಚನ ಸಾಹಿತ್ಯ ಮತ್ತು ವೈಚಾರಿಕತೆ ಸಮಾಜದ ಅಸಮಾನತೆ ಹಾಗೂ ಮೌಢ್ಯತೆಯ ವಿರುದ್ಧ ಧ್ವನಿ ಎತ್ತಿದ ಮಾದಾರ ಚೆನ್ನಯ್ಯನವರ ಪ್ರಮುಖ ವಚನಗಳು ಮತ್ತು ಅವುಗಳ ಭಾವಾರ್ಥಗಳು ಇಲ್ಲಿವೆ: 1. ನಡೆ ಮತ್ತು ನುಡಿಯ ಪ್ರಾಮುಖ್ಯತೆ (ಆಚಾರವೇ ಕುಲ) “ಆಚಾರವೆ ಕುಲ, ಅನಾಚಾರವೆ ಹೊಲೆ” ಎಂಬ ವಚನದಲ್ಲಿ, ಕೇವಲ ಒಳ್ಳೆಯ ಮಾತುಗಳನ್ನಾಡಿ ಕೆಟ್ಟ ನಡವಳಿಕೆ ಹೊಂದಿದ್ದರೆ ಅದುವೇ ‘ಹೊಲೆ’ (ಮೈಲಿಗೆ) ಎಂದು ಚೆನ್ನಯ್ಯನವರು ಸ್ಪಷ್ಟಪಡಿಸುತ್ತಾರೆ. ಕಾಯಕನಿಷ್ಠೆಯು ನಡೆ-ನುಡಿಯ ಸಮಾನತೆಯಲ್ಲಿದೆ ಎಂದು ಪ್ರತಿಪಾದಿಸಿ, ಆಚಾರವೇ ನಿಜವಾದ ಶ್ರೇಷ್ಠ ಕುಲ ಎಂದು ಒತ್ತಿ ಹೇಳುತ್ತಾರೆ.  2. ಸಾಮಾಜಿಕ ಸಮಾನತೆ ಮತ್ತು ಜಾತಿ ಪದ್ಧತಿಯ ಖಂಡನೆ ಸಮಾಜದಲ್ಲಿನ ಹದಿನೆಂಟು ಜಾತಿಗಳ ಭೇದವನ್ನು ತಳ್ಳಿಹಾಕುವ ಅವರು, ಮನುಷ್ಯರ ನಡುವಿನ ಅಸಮಾನತೆಯನ್ನು ಖಂಡಿಸುತ್ತಾರೆ. ಹುಟ್ಟಿನಿಂದ ಯಾರೂ ಕೀಳು ಅಥವಾ ಮೇಲಲ್ಲ, ಕಾಯಕದ ಆಧಾರದ ಮೇಲೆ ಕೇವಲ ಕೆಲಸದ ವಿಂಗಡಣೆಯಷ್ಟೇ ನಡೆದಿದೆ. ಸತ್ಯ ಮತ್ತು ಬ್ರಹ್ಮವನ್ನು ಅರಿತವನೇ ನಿಜವಾದ ಬ್ರಾಹ್ಮಣ ಎಂಬ ವಿಚಾರವನ್ನು ಇವರು ವಚನಗಳಲ್ಲಿ ಮಂಡಿಸಿದ್ದಾರೆ.  3. ಬಾಹ್ಯ ಪೂಜೆ ಮತ್ತು ಆತ್ಮಜ್ಞಾನ ದೇಹವಿರುವ ತನಕ ಕರ್ಮ-ಪೂಜೆಗಳು ಮುಖ್ಯವಾದರೂ, ನಿಜವಾದ ಮುಕ್ತಿ ಸಿಗುವುದು ಬಾಹ್ಯ ಕ್ರಿಯೆಗಳಿಂದಲೋ ಅಥವಾ ಆತ್ಮಜ್ಞಾನದಿಂದಲೋ ಎಂಬ ಜಿಜ್ಞಾಸೆಯನ್ನು ವಚನಗಳಲ್ಲಿ ವ್ಯಕ್ತಪಡಿಸುತ್ತಾರೆ. ಕಾಯದ ಕರ್ಮಕ್ಕಿಂತ ಆತ್ಮಜ್ಞಾನವೇ ಮುಖ್ಯ ಎಂಬುದನ್ನು ಒತ್ತಿಹೇಳಿ, ಭಕ್ತಿಯ ಮಾರ್ಗವನ್ನು ಪ್ರಾರ್ಥಿಸುತ್ತಾರೆ.  ವಚನಗಳ ವೈಶಿಷ್ಟ್ಯ: ಇವರ ಸಮಾಧಿ ಚಾಮರಾಜನಗರ ಜಿಲ್ಲೆಯ ತಮಿಳುನಾಡಿಗೆ ಅಂಟಿಕೊಂಡ ಕುರುಬಗಟ್ಟಿಯಲ್ಲಿ ಕಾಣ ಬಹುದು ಕರ್ನಾಟಕ ಸರ್ಕಾರವು ಇವರ ಕಾಯಕ ನಿಷ್ಠೆ ಮತ್ತು ಸಮಾಜ ಸುಧಾರಣೆಯ ನೆನಪಿಗಾಗಿ ಪ್ರತಿ ವರ್ಷ ಮಾದಾರ ಚೆನ್ನಯ್ಯ ಜಯಂತಿಯನ್ನು ಆಚರಿಸುತ್ತದೆ. ______________________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ 

Read Post »

ಅಂಕಣ ಸಂಗಾತಿ, ಗಾದೆಗಳ ಗಣಿ

ಅಂಕಣ ಸಂಗಾತಿ ಗಾದೆಗಳ ಗಣಿ ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಸಮುದ್ರದ ನೆಂಟಸ್ತನ, ಉಪ್ಪಿಗೆ ಬಡತನ ಮನುಷ್ಯನಿಗೆ ಹೊನ್ನಿನ ರಾಶಿ ಸಿಕ್ಕರೂ ತೃಪ್ತಿಯಾಗುವುದಿಲ್ಲ.ಭವ ಬಂಧನದ ಆಸೆ-ಆಕಾಂಕ್ಷೆಗಳು ಪೆಡಂಭೂತವಾಗಿ ಕಾಡುತ್ತದೆ ಅವನಿಗೆ.ಪ್ರತಿಷ್ಠೆ,ತೋರಿಕೆಯ ಆಸೆ ನುಸುಳುತ್ತದೆ ಅವನ ಮನದೊಳಗೆ.ನೆಮ್ಮದಿಯು ತನ್ನಲ್ಲಿದ್ದರೂ ಅತೀ ನೆಮ್ಮದಿ ಪಡೆಯಲು ಅತ್ಯಂತ ಶ್ರೀಮಂತರ ಸಂಬಂಧಗಳನ್ನು ಬೆಳೆಸಲು ಮುಂದಾಗುತ್ತಾರೆ.ಅವರು ಒಳ್ಳೆಯವರೊ….ಕೆಟ್ಟವರೊ..‌ಮನುಷ್ಯತ್ವದಲ್ಲಿದ್ದಾರೊ….ಅಥವಾ ಅಮಾನುಷತ್ವದಲ್ಲಿ ಮುಳುಗಿದ್ದಾರೊ….ಯಾವುದೂ ಅರಿಯದೆ ಕೇವಲ ಅವರ ಸಿರಿತನದ ಮನೆತನವಿದ್ದರೆ ಸಾಕು,ಸಂಬಂಧ ಬೆಳೆಸಿಬಿಡುತ್ತಾರೆ.ಬಿಳಿಯಾಗಿ ಕಾಣುವುದೆಲ್ಲಾ ಹಾಲಲ್ಲ.ವೇಗವಾಗಿ ಓಡುವ ಮನಸ್ಸಿಗೆ ಏನೆಂದೂ ಕಾಣುವುದಿಲ್ಲ.ಈಗಿನ ಕಾಲದಲ್ಲಿ ಶ್ರೀಮಂತರ ಮನೆತನಗಳಲ್ಲಿ ನಯ  ವಿನಯ ಮರೆಯಾಗಿದ್ದು  ಮದ ಮತ್ಸರ,ಕೋಪ ತಾಪಗಳು ಮತ್ತು ವಿಶ್ವಾಸ ದ್ರೋಹಗಳೆ ಹಲವು ಬಗೆಯಾಗಿರುತ್ತವೆ.ನಾವುಗಳು ನಾವೇ ಆಗಿರಬೇಕು.ಯಾಕೆಂದರೆ ಜೀವನದಲ್ಲಿ ಅನೇಕ ರೀತಿಯ ಆಯ್ಕೆಗಳಿವೆ.ಅದೆಷ್ಟೋ ಆಯ್ಕೆಗಳನ್ನು ಪಡೆಯಲು ಪ್ರಯತ್ನ ಪಡುತ್ತಲೆ ಇರುತ್ತೇವೆ.ಸಣ್ಣ ಪುಟ್ಟ ಸಂತೋಷಗಳನ್ನು ಪೂರೈಸಿಕೊಳ್ಳಲು,ಸ್ವಾರ್ಥದಿಂದ ಆದರೂ ಸಾಧಿಸಿಕೊಳ್ಳುತ್ತೇವೆ.ನಾವೇ ತೋಡಿದ ತೆಗ್ಗಿನಲಿ ಒಂದಾನೊಂದು ದಿನ ಬೀಳುತ್ತೇವೆ.ಇದು ಸತ್ಯ.ಆತುರವೆಂದರೆ ಒಂದಲ್ಲ ಎರಡಲ್ಲ.,ಹತ್ತಾರು ಕೆಲಸ ಕಾರ್ಯಗಳ ಆತುರ.ತಾಳ್ಮೆ ಎಂಬುದು  ಬಹು ದೂರ.ಮಾತಿನ ಆತುರ.,ದುಡುಕುವ ಆತುರ.,ಹತ್ತಾರು ವಿಷಯಗಳ ಆತುರ.,ಪ್ರತಿ ಕೆಲಸಕ್ಕೂ ಆತುರವಾದರೆ ಹಿತವೆನ್ನುವ ಪಲಿತಾಂಶದಲ್ಲಿ ಫೇಲು ಆಗಬಹುದು.ನಮ್ಮೆದುರಿಗೆ ಇರುವವರನ್ನು ಹಿಂದಿಕ್ಕಿ ಓಡಬೇಕು ಎನ್ನುವ ಆತುರ.ಈ ವಿಷಯದಲ್ಲಿ ನಾವುಗಳು ತುಸು ಯೋಚಿಸುವುದಿಲ್ಲ.ನಮಗೆ ನಮ್ಮ ಕೆಲಸವೇ ಬಹು ಮುಖ್ಯ.ಇನ್ನೊಬ್ಬರ ಕಷ್ಟ ಕಾರ್ಪಣ್ಯಗಳಿಂದ ನಮಗೆ ಆಗುವುದಾದರೂ ಏನಿದೆ? ಅನ್ನುವ ಸ್ವಭಾವವನ್ನು ನಾವುಗಳು ಹೊಂದಿರುತ್ತೇವೆ.ಇದೇ ಕಾರಣಕ್ಕೆ ಸೂಕ್ಷ್ಮವನ್ನು ಅರಿಯದೆ ಹೋಗುತ್ತೇವೆ.ಈ ಮಾತಿನ ಅರಿವು ಇಷ್ಟೆ. ಪ್ರಭಾವಿ ಅಥವಾ ಶ್ರೀಮಂತ ವ್ಯಕ್ತಿಗಳ ಜೊತೆ ನಿಕಟ ಸಂಬಂಧವಿದ್ದರೂ, ಅದರಿಂದ ನಮಗೆ ಯಾವುದೇ ಪ್ರಯೋಜನ ಸಿಗದ ಪರಿಸ್ಥಿತಿಯನ್ನು ವಿವರಿಸುತ್ತದೆ.  ಅಳತೆಗೆ ಸಿಗದ ನೀರನ್ನು ಹೊಂದಿರುವ ಸಮುದ್ರದ ಜೊತೆ ನಮಗೆ ಸ್ನೇಹವಿದ್ದರೂ, ನಮಗೆ ಬೇಕಾದ ಒಂದು ಸಣ್ಣ ಹಿಡಿ ಉಪ್ಪು ಸಿಗದೇ ಹೋದರೆ ಆ ಸ್ನೇಹದಿಂದ ಏನು ತಾನೇ ಪ್ರಯೋಜನ?​ ಅಧಿಕಾರ ಮತ್ತು ಪ್ರಭಾವದ ನೆರಳಿನಡಿಯಲ್ಲಿ​ನಮಗೆ ಸಮಾಜದಲ್ಲಿ ದೊಡ್ಡ ಸ್ಥಾನಮಾನ ಹೊಂದಿರುವವರು ಅಥವಾ ರಾಜಕಾರಣಿಗಳು ಪರಿಚಯವಿರಬಹುದು. ಲೋಕದ ದೃಷ್ಟಿಯಲ್ಲಿ ನಾವು ಅವರ “ಆಪ್ತರು” ಎನಿಸಿಕೊಳ್ಳಬೇಕು.ಅವರ ಜೊತೆ ನಿಕಟ ಸಂಪರ್ಕದಲ್ಲಿರಬೇಕು  ಎಂದು ಸದಾ ಬಯಸುತ್ತೇವೆ. ಆದರೆ ನಮಗೆ ಒಂದು ಸಣ್ಣ ವೈಯಕ್ತಿಕ ಕೆಲಸ ಅಥವಾ ಸಹಾಯದ ಅವಶ್ಯಕತೆ ಬಂದಾಗ, ಆ ಪ್ರಭಾವಿ ವ್ಯಕ್ತಿಗಳು ನಮಗೆ ನೆರವಾಗದಿದ್ದರೆ ಅದು “ಸಮುದ್ರದ ನೆಂಟಸ್ತಿಕೆಯಂತೆಯೇ  ಸರಿ.​ವ್ಯರ್ಥ ಪ್ರಯತ್ನ ,ವ್ಯರ್ಥ ಹೆಮ್ಮೆಪಡುವುದು ಕ್ಷೀಣಿಸುತ್ತಿದೆ .ದೊಡ್ಡವರ ಪರಿಚಯವಿದೆ ಎಂದು ಜಗತ್ತಿಗೆ ಹೇಳಿಕೊಳ್ಳುವುದು ಸುಲಭ, ಆದರೆ ಆ ಸ್ನೇಹವು  ಫಲ ನೀಡದಿದ್ದಾಗ ಅದು ಕೇವಲ ಒಂದು ಬೃಹದಾಕಾರದ  ಬಲೂನಿನಂತೆ ಎಂದೆನಿಸಿ ಬಿಡುತ್ತದೆ.​ನಿರೀಕ್ಷೆ ಮತ್ತು ವಾಸ್ತವವು ಸುಳ್ಳಾಗಿ ಟುಸ್ ಎನ್ನುವ ಮುಕ್ಭತ್ತಿಯಾಗಿಡುವುದು . ಸಮುದ್ರದ ಅಲೆಗಳು ದಡಕ್ಕೆ ಬಂದು,ಬಡಿದು ಹಿಂದಕ್ಕೆ ಹೋಗುವುದು ನೋಡಲು  ಬಹು ಸುಂದರ, ಆದರೆ ಆ ಅಲೆಗಳು ಮನೆಯ ಬಾಯಾರಿಕೆಯನ್ನು ತಣಿಸಲಾರವು. ​ ಶ್ರೀಮಂತಿಕೆ ಮತ್ತು ಬಡತನದ ನಡುವಿನ ವ್ಯತ್ಯಾಸವು ಬಹಳ ಆಳವೂ,ಅನಂತವೂ ಆಗಿದೆ.​ಶ್ರೀಮಂತ ಕುಟುಂಬಗಳಲ್ಲಿ ಅಥವಾ ದೊಡ್ಡ ಉದ್ಯಮಿಗಳ ಅಡಿಯಲ್ಲಿ ಕೆಲಸ ಮಾಡುವ ಅನೇಕರನ್ನು ನಾವು ನೋಡುತ್ತೇವೆ. ಹೊರಗಿನ ಜನರಿಗೆ ಅವರು ಬಹಳ ಅದೃಷ್ಟವಂತರು ಎಂದು ಅನಿಸುತ್ತದೆ. ಆದರೆ ಆ ಶ್ರೀಮಂತರ ಮನೆಯಲ್ಲೇ ಕೆಲಸ ಮಾಡುವವರಿಗೆ  ಸರಿಯಾದ ಸಮಯಕ್ಕೆ  ಸಂಬಳವಿಲ್ಲದೆ ಅಥವಾ ಜೀವನದ ಮೂಲಭೂತ ಸೌಕರ್ಯಗಳಿಲ್ಲದೆ ಬಡತನದಲ್ಲಿ ಬೆಂದು,ಕೊನೆಗೆ ಅಂಥವರ ಮನೆಯ ಕೆಲಸವನ್ನು ಬಿಟ್ಟು ಹೋಗುವರು. ​”ಕಲ್ಪವೃಕ್ಷದ ಕೆಳಗೆ ನಿಂತರೂ ಬೇಡಲು ಬಾಯಿಯಿಲ್ಲದಂತೆ,ಮೂಕನಾದಂತೆ., ಕೈಯಲ್ಲಿ ಪಾತ್ರೆಯಿಲ್ಲದಿದ್ದರೆ ಮಳೆ ನೀರು ಕುಡಿಯಲು ಸಾಧ್ಯವಿಲ್ಲ.” ಹಾಗೆಯೇ, ಶ್ರೀಮಂತಿಕೆಯ ಸನಿಹವಿದ್ದರೂ ಅದನ್ನು ಹಂಚಿಕೊಳ್ಳುವ ಗುಣ ಅಥವಾ ಅದನ್ನು ಪಡೆಯುವ ಯೋಗ ಎರಡೂ ಮುಖ್ಯವಾಗುತ್ತದೆ. ​ಜ್ಞಾನ ಮತ್ತು ಅನ್ವಯದ ಕೊರತೆಯಿಂದ​ಈ ಮಾತನ್ನು ಕೇವಲ ಹಣಕ್ಕೆ ಸೀಮಿತಗೊಳಿಸದೆ, ಜ್ಞಾನಕ್ಕೂ ಅನ್ವಯಿಸಬಹುದು.​ನಮ್ಮ ಮನೆಯಲ್ಲಿ ಸಾವಿರಾರು ಪುಸ್ತಕಗಳಿರಬಹುದು, ಅಥವಾ ನಮಗೆ ಮಹಾನ್ ವಿದ್ವಾಂಸರ ಪರಿಚಯವಿರಬಹುದು.​ಆದರೆ ನಾವು ಆ ಜ್ಞಾನವನ್ನು ಬಳಸಿಕೊಳ್ಳದಿದ್ದರೆ ಅಥವಾ ನಮಗೆ ಜೀವನದ ಕಷ್ಟಕಾಲದಲ್ಲಿ ಆ ವಿದ್ವಾಂಸರಿಂದ ಒಂದು ತುಸುವಾದರೂ  ಮಾರ್ಗದರ್ಶನ ಸಿಗದಿದ್ದರೆ, ಅದು ನಡುರಾತ್ರಿಯಲ್ಲಿ ಹಿಡಿದ ಕೈದೀವಿಗೆಯಂತೆ ಶೂನ್ಯವಾಗಿರುತ್ತದೆ. ​ಸಂಬಂಧಗಳಲ್ಲಿನ ಪೊಳ್ಳುತನವು​ಇಂದಿನ ಕಾಲದ ಸಾಮಾಜಿಕ ಜಾಲತಾಣಗಳ ಯುಗದಲ್ಲಿ ಸಾವಿರಾರು “ಸ್ನೇಹಿತರು” ಇರುತ್ತಾರೆ. ಇದು ಸಮುದ್ರದಷ್ಟು ದೊಡ್ಡ ಜಾಲವಾಗಿದೆ.ಆದರೆ ನಮಗೆ ಮಾನಸಿಕವಾಗಿ ನೋವಾದಾಗ ಅಥವಾ ಸಹಾಯದ ಹಸ್ತ ಬೇಕಾದಾಗ ಒಬ್ಬರೂ ಬಾರದಿದ್ದರೆ, ಈ ಸೋಷಿಯಲ್ ಮೀಡಿಯಾ ಸ್ನೇಹವು “ಸಮುದ್ರದ ನೆಂಟಸ್ತನಕ್ಕೆ” ಸಾಕ್ಷಿಯಾಗುತ್ತದೆ.​ಸಮುದ್ರದ ನೀರು: ತುಂಬಾ ಇದೆ, ಆದರೆ ಕುಡಿಯಲು ಯೋಗ್ಯವಲ್ಲ.​ಬಾಹ್ಯ ಸಡಗರವಿದ್ದಂತೆ.ಬರೀ ತೋರಿಕೆಗೆ ಕಡಲು.ಆ ಕಡಲಿನ ಪಕ್ಕದಲ್ಲಿ ಮನೆ ಮಾಡಿದವರಿಗೆ ಗೊತ್ತು ಸಾಧಕ ಬಾಧಕಗಳು.ಹಾಗೆನೆ ಉಳ್ಳವರ ಸಂಬಂಧಗಳಲ್ಲಿ ತೋರಿಕೆ ಜಾಸ್ತಿಯಾಗಿ ಅಂತರಂಗದ ಮಿಡಿತ ಕಡಿಮೆಯಾದಾಗ  ಇಂತಹ ಗಾದೆ ಮಾತುಗಳು ಜನ್ಮತಾಳುತ್ತವೆ ​ಈ ಮಾತು ನಮಗೆ ಎರಡು ಬಹು ಮುಖ್ಯ ಪಾಠಗಳನ್ನು ಕಲಿಸಿಕೊಡುತ್ತದೆ.​ಆತ್ಮನಿರ್ಭರತೆ ಮತ್ತು ಗುಣದ ಬೆಲೆ. ಬೇರೆಯವರ ಶ್ರೀಮಂತಿಕೆ ಅಥವಾ ಅಧಿಕಾರವನ್ನು ನೋಡಿ ನಮಗೆ ಏನೋ ಸಿಗುತ್ತದೆ ಎಂಬ ಭ್ರಮೆಯಲ್ಲಿ ಬದುಕಲು ಆಸೆಪಡುತ್ತೇವೆ. ಆ ಆಸೆಯು ಈಡೇರದಿದ್ದಾಗ ಆತ್ಮ ನಿರ್ಭರವಾಗಿ ಅವರ ಒಳ ಗುಣದ ಅರಿವು ಪ್ರತ್ಯಕ್ಷವಾದಾಗ ದೂರಾಗುತ್ತೇವೆ.    ನಮಗೆ ಬೇಕಾದ ‘ಉಪ್ಪನ್ನು’ ನಾವೇ ಸಂಪಾದಿಸಿಕೊಳ್ಳಬೇಕು.​ರಾಜರ ,ರಾಜಕಾರಿಣಿಗಳ,ಜಮೀನ್ದಾರರ ಅದೆಷ್ಟು  ಸಂಪತ್ತು ಇದ್ದರೂ ನಮಗಾಗುವದೇನು?  ಅದು ಯಾರಿಗಾದರೂ ಬಳಕೆಯಾಗುತ್ತದೆಯೇ ಎಂಬುದು ಮುಖ್ಯ. ಉಪ್ಪಿಲ್ಲದ ಊಟ ಹೇಗೆ ರುಚಿಸುವುದಿಲ್ಲವೋ, ಹಾಗೆಯೇ ಮಾನವೀಯತೆ ಇಲ್ಲದ ಮಹಾನ್ ವ್ಯಕ್ತಿಗಳ ಸ್ನೇಹವು ನಿರರ್ಥಕ.​ಸಮುದ್ರದ ಹತ್ತಿರ ವಾಸಿಸಿದರೂ ಹನಿ ನೀರಿಗಾಗಿ ಪರದಾಡುವ ಸ್ಥಿತಿ ನಮಗೆ ಬಾರದಿರಲಿ. ನಾವು ಬೆಳೆಸುವ ಸ್ನೇಹವು ಕೇವಲ ಗಾತ್ರದಲ್ಲಿ “ಸಮುದ್ರದಂತೆ” ಇರದೆ, ಗುಣದಲ್ಲಿ “ಶುದ್ಧ ಜಲದಂತೆ” ಇರಲಿ. ಆಡಂಬರದ ಸಂಬಂಧಗಳಿಗಿಂತ ಕಷ್ಟಕ್ಕೆ ಬರುವ ಪುಟ್ಟ ಸಂಬಂಧವೇ ಮಿಗಿಲು. ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಇವರು (ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ) 1998 ರಿಂದ ಕೆ.ಇ.ಬಿ.ಇಲಾಖೆಯಲ್ಲಿ ಲೈನ್ ಮ್ಯಾನ್ ವೃತ್ತಿ ಪ್ರಾರಂಭ.ಪ್ರಸ್ತುತ ಗಂಗಾವತಿ ನಗರದಲ್ಲಿ ಮೀಟರ್ ರೀಡರ್ ಸೇವೆ ಸಲ್ಲಿಸುತ್ತಿದ್ದಾರೆ.ಪ್ರವೃತ್ತಿಯಲ್ಲಿ ಹವ್ಯಾಸಿ ಬರಹಗಾರರು.ಪ್ರಕಟಿತ ಪುಸ್ತಕಗಳು1)ನಾನಲ್ಲದ ನನ್ನೊಳಗೊಬ್ಬ(ಕವನ ಸಂಕಲನ)2)ನಕ್ಷತ್ರ ಗೊಂಚಲು(ಹಾಯ್ಕು ಗಳ ಸಂಕಲನ)3)ನಂಜು ನುಂಗಿದ ನಗು(ಕವನ ಸಂಕಲನ)4) ನಾಕು ತಾವಿನ ತಿರುವು(ಕವನ ಸಂಕಲನ)5)ನುಡಿದಷ್ಟೆ ನವಿರು(ವಿಮರ್ಶೆ ಕೃತಿ)ಪ್ರಶಸ್ತಿಗಳುಕವಿ ಭೂಷಣ ಪ್ರಶಸ್ತಿಅಡ್ವೈಸರ್ ಸಾಹಿತ್ಯ ಪ್ರಶಸ್ತಿ (ಮಂಡ್ಯ)ರುಕ್ಮಿಣಿ ಬಾಯಿ ಸಾಹಿತ್ಯ ಶ್ರೇಷ್ಠ ಪ್ರಶಸ್ತಿಚೆನ್ನಬಸವೇಶ್ವರ ಸಾಹಿತ್ಯ ಪ್ರಶಸ್ತಿಬೀಚಿ ಸಾಹಿತ್ಯ ಪ್ರಶಸ್ತಿರಾಜ್ಯ ಮಟ್ಟದ ಜನ್ನ ಕಾವ್ಯ ಪ್ರಶಸ್ತಿ (ಮಾಣಿಕ್ಯ ಪ್ರಕಾಶನ ಹಾಸನ)ಚೆನ್ನವೀರ ಕಣವಿ ರಾಜ್ಯ ಸಾಹಿತ್ಯ ಪ್ರಶಸ್ತಿ (ಧಾರವಾಡ)ಡಾ.ಸಿದ್ಧಲಿಂಗಯ್ಯ ರಾಜ್ಯ ಸಾಹಿತ್ಯ ಪ್ರಶಸ್ತಿ (ಬಸವನ ಬಾಗೇವಾಡಿ)ರಾಜ್ಯ ಮಟ್ಟದ ಹೊಯ್ಸಳ ಸಾಹಿತ್ಯ ಪ್ರಶಸ್ತಿ (ಹಾಸನ.ಮಾಣಿಕ್ಯ ಪ್ರಕಾಶನ)ಕವಿ ಕಾವ್ಯ ಪುರಸ್ಕಾರ (ಮಂಡ್ಯ) ರಾಜ್ಯದ ಅನೇಕ ಪ್ರತಿಷ್ಠಿತ ಸಂಘಟನೆಯಲ್ಲಿ ಕಾವ್ಯ ಕಮ್ಮಟ, ಕವಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.ಸೇವೆಕಾವ್ಯಲೋಕ (ಗಂಗಾವತಿ )ಸಂಘಟನೆಯಲ್ಲಿ ಕಾರ್ಯದರ್ಶಿಯಾಗಿ 89 ಕವಿಗೋಷ್ಠಿಯನ್ನು ನಿರ್ವಹಣೆ ಮಾಡಿದ್ದಾರೆ.ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗಂಗಾವತಿಯಲ್ಲಿ 21ಕವಿಗೋಷ್ಠಿ ನಡೆಸಿದ್ದಾರೆ.ಸಿರಿಗನ್ನಡ ವೇದಿಕೆ ಗಂಗಾವತಿ ತಾಲುಕಾಧ್ಯಕ್ಷರಾಗಿ ಮೂರು ವರುಷ ಸೇವೆ ಮತ್ತು 15 ಕವಿಗೋಷ್ಠಿ ನಡೆಸಿದ್ದಾರೆ.ಶರಣ ಸಾಹಿತ್ಯ ಪರಿಷತ್ ಗಂಗಾವತಿ ಯಲ್ಲಿ ಕಾರ್ಯದರ್ಶಿಯಾಗಿ ಒಂದು ವರುಷ ಸೇವೆ ಮತ್ತು 30 ವಚನ ಶ್ರಾವಣ ನಿರ್ವಹಣೆ.ಸಧ್ಯದಲ್ಲಿಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಗಂಗಾವತಿಯ ತಾಲುಕು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ರಾಜ್ಯ ಮಟ್ಟದ ಕವಿ ಕಾವ್ಯ ಸಂಭ್ರಮ ಮತ್ತು ಕವಿ ಸಮ್ಮೇಳನ ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ.ಹಲವು ಕವಿಗೋಷ್ಠಿ ಯ ಅಧ್ಯಕ್ಷತೆ ವಹಿಸಿದ್ದಾರೆ.2019ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮುದುಗಲ್ಲನಲ್ಲಿ ಏರ್ಪಡಿಸಿದ ತಾಲುಕು ಕವಿ ಸಮ್ಮೇಳನದ ಅಧ್ಯಕ್ಷರಾಗಿ, ಅಧ್ಯಕ್ಷತೆ ನಿರ್ವಹಿಸಿದ ಹೆಮ್ಮೆ.

Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-29 ಅರ್ಜುನ ಉವಾಚ ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ  ಹೀಗಿದ್ದರು ಸ್ತ್ರೀರಾಜ್ಯದ ಸ್ತ್ರೀಯರು                            ನಮ್ಮ ಕುದುರೆ ಪ್ರವೇಶಿಸಿದ್ದು ಸ್ತ್ರೀರಾಜ್ಯವನ್ನು. ನಾವು ಹೊಕ್ಕದ್ದು ವನಿತಾ ಸೀಮೆಯನ್ನು. ಭಾರವನ್ನು ತಾಳಲಾರದೆ ಧರಣಿ ಕುಗ್ಗಿದೆಯೋ ಏನೋ! ತುಸು ಮುಂದೆ ಹಿಗ್ಗಿದೆಯೋ ಏನೋ! ಎಂಬಂತಿತ್ತು ಅಲ್ಲಿಯ ಭೂಮಿಯ ಸ್ವರೂಪ. ಹೀಗೆ ಏರಿಳಿತಗಳಲ್ಲಿಯೇ ಸಾಗಿದೆವು ನಾವು. ಸ್ತ್ರೀರಾಜ್ಯದ ಬಗೆಗೆ ಇನ್ನಷ್ಟು ವಿಚಾರಗಳನ್ನು ತಿಳಿದುಕೊಳ್ಳುತ್ತಾ ಹೋದಂತೆ ನನ್ನಲ್ಲಿ ಅಳುಕು ಮೂಡತೊಡಗಿತು. ನನ್ನ ಜೊತೆಗಿದ್ದವರೆಲ್ಲಾ ಸಂಯಮದ ಮನಸ್ಸನ್ನು ಕಾಪಾಡಿಕೊಳ್ಳದಿದ್ದರೆ ಆ ಸ್ತ್ರೀರಾಜ್ಯವನ್ನು ದಾಟಿ ಮುಂದೆ ಹೋಗುವುದು ಸಾಧ್ಯವಿಲ್ಲ ಎಂಬ ಭಯ ನನ್ನಲ್ಲಿ ಉಂಟಾಯಿತು.    ಅಲ್ಲಿದ್ದವರೆಲ್ಲಾ ನಾರಿಯರೇ. ಪುರುಷರು ಜೀವನ ನಡೆಸುವುದಕ್ಕೆ ಅಲ್ಲಿ ಅವಕಾಶವೇ ಇರಲಿಲ್ಲ. ಅಲ್ಲಿದ್ದ ಸ್ತ್ರೀಯರು ಯೌವ್ವನಾವಸ್ಥೆಯನ್ನು ಹೊಂದಿದವರು. ಮಧುಪಾನದಿಂದ ಮತ್ತೇರಿಸಿಕೊಳ್ಳುವ ಚಟವನ್ನು ಇಟ್ಟುಕೊಂಡವರು. ಚೆಲುವಿತ್ತು ಅವರಿಗೆ. ಲಾವಣ್ಯವತಿಯರಾಗಿದ್ದರು. ಬಗೆಬಗೆಯ ಕಲೆಗಳಲ್ಲಿ ಪ್ರೌಢಿಮೆಯನ್ನು ರೂಢಿಸಿಕೊಂಡಿದ್ದರು. ಹಾಡನ್ನು ಇಂಪಾಗಿ ಹಾಡುವ ಕೌಶಲ್ಯವಿತ್ತು. ನೃತ್ಯವನ್ನು ಸೊಂಪಾಗಿ ಮಾಡುವ ಪ್ರತಿಭೆಯಿತ್ತು. ಕೊಳಲನ್ನು ನುಡಿಸುತ್ತಿದ್ದರು ಕೋಗಿಲೆ ಕೊರಳಿನಿಂದ ಧ್ವನಿಸರವು ಹೊಮ್ಮಿದಂತೆ. ವೀಣೆಯನ್ನು ನುಡಿಸುತ್ತಿದ್ದರು ರಸಿಕ ಹೃದಯದಿಂದ ಸ್ವರರಸವು ಚಿಮ್ಮಿದಂತೆ. ಮಾತುಮಾತಿಗೆ ನಗುವ, ಮಾತುಮಾತಿನಲಿ ನಗಿಸುವ ವಿನೋದ ಪ್ರಜ್ಞೆಯಿತ್ತು ಅಲ್ಲಿಯ ವಿನೋದಿನಿಯರಲ್ಲಿ. ಭೋಗಾಸಕ್ತರಾಗಿದ್ದರು ಅಲ್ಲಿನ ವನಿತೆಯರು. ಹೀಗೆ ಸ್ತ್ರೀಗಣವದು, ಸ್ತ್ರೀಗುಣಗಳ ಹೊಂದಿ, ಸ್ತ್ರೀಗಡಣದಲ್ಲಿಯೇ ಬದುಕು ನಡೆಸುತ್ತಾ, ಸ್ತ್ರೀಗಣಿಯೊಂದನ್ನು ನಿರ್ಮಿಸಿತ್ತು ಈ ಭೂಮಿಯೊಳಗೆ.    ಹೀಗಿದ್ದ ವನಿತಾ ರಾಜ್ಯವನ್ನು ಪ್ರವೇಶಿಸಿ ಅಲ್ಲಿಂದ ಜೀವಂತವಾಗಿ ಹೊರಬಂದ ಪುರುಷರು ಇರಲಿಲ್ಲ. ಬಂದ ಗಂಡಸರನ್ನು ಆಕರ್ಷಿಸಿ, ಕೊನೆಗೆ ಮರಣವನ್ನೀಯುವ ಕಠೋರತೆಯಿತ್ತು ಅಲ್ಲಿನ ಹೆಂಗಳೆಯರ ಹೃದಯದಲ್ಲಿ. ಸೌಂದರ್ಯಮಯ ದೇಹವನ್ನು ಮುಂದಿಟ್ಟು ಪುರುಷರನ್ನು ಯಮಪಾಶಕ್ಕೆ ಸಿಲುಕಿಸುತ್ತಿದ್ದ ಮೋಹನಾಂಗಿಯರು ಅಲ್ಲಿನವರು.    ಬಂದ ಗಂಡಸರನ್ನು ಕಂಡು ಚೆಲ್ಲುಚೆಲ್ಲಾಗಿ ನೋಡುತ್ತಾ, ಆಸೆಯ ಕಣ್ಣೋಟ ಬೀರುತ್ತಿದ್ದರು. ಆಕರ್ಷಕವಾದ ಭಂಗಿಯಲ್ಲಿ ನಿಂತು, ಕಾಲ ಉಗುರುಗಳಿಂದ ನೆಲವನ್ನು ಕೆರೆಯುತ್ತಾ ಹುಸಿಲಜ್ಜೆಯ ಭಾವವನ್ನು ತೋರಿಸುತ್ತಿದ್ದರು. ಸರಸಗೈಯ್ಯುವ ಸಮಯದಲ್ಲಿ ದೇಹಸಿರಿಯನ್ನು ಉಣಬಡಿಸುತ್ತಾ ಗಂಡಸರಿಗೆ ಹುಚ್ಚು ಹಿಡಿದು ಅವರ ಅರಿವು ಇನ್ನಿಲ್ಲವಾಗುವ ಹಾಗೆ ಮದವನ್ನು ಏರಿಸುತ್ತಿದ್ದರು.    ಇಲ್ಲಿನ ಸ್ತ್ರೀಯೊಡನೆ ಒಮ್ಮೆ ಸರಸಕೇಳಿಗೆ ಇಳಿದ ಬಳಿಕ ಅದೇ ವಿಷಯದಲ್ಲಿ ಸಂಪೂರ್ಣ ಆಸಕ್ತನಾಗಿಬಿಡುತ್ತಿದ್ದ ಇಲ್ಲಿಗೆ ಬಂದ ಪುರುಷ. ಇಲ್ಲಿಂದ ತೆರಳಲು ಅವನಿಗೆ ಮನಸ್ಸೇ ಆಗುತ್ತಿರಲಿಲ್ಲ. ನಾನಾ ಪ್ರಕಾರದ ಕಾಮಕ್ರೀಡೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ಈ ಬಗೆಯಲ್ಲಿಯೇ ಒಂದು ತಿಂಗಳು ಸುಖಿಸುತ್ತಿದ್ದರು. ಉತ್ತಮವಾದ ಸುಗಂಧವನ್ನು ಮೈಗೆ ಬಳಿದುಕೊಂಡು, ಸುಗಂಧ ದ್ರವ್ಯವನ್ನು ಬಾಯಿಗೆ ಹಾಕಿಕೊಂಡು, ತಾಂಬೂಲ, ಮಧುಪಾನ ಮೊದಲಾದವುಗಳ ಮೂಲಕ ಮದನಕೇಳಿಯ ಉತ್ತುಂಗ ಸೊಗವನ್ನು ಅನುಭವಿಸುತ್ತಿದ್ದರು.  ವಿಧವಿಧವಾದ ಬಗೆಯಲ್ಲಿ ಶೋಭಿಸುವ ಕುಸುಮಸಮೂಹಗಳ ಪರಿಮಳಭರಿತವಾದ ಮಕರಂದಗಳನ್ನು ಚಿನ್ನದ ಬಟ್ಟಲಲ್ಲಿ ಸುರಿಯುತ್ತಿದ್ದಳು ಹೆಣ್ಣು. ಆ ಮಕರಂದಕ್ಕೆ ತನ್ನ ತುಟಿಯ ಸಿಹಿಯನ್ನು ಸೇರಿಸುವಂತೆ ಬಟ್ಟಲಿಗೆ ಮುಖವಿಟ್ಟು ಅದನ್ನು ಸವಿಯುತ್ತಿದ್ದಳು. ಉಳಿದ ಮಕರಂದವನ್ನು ನೋಡಿ ನಗು ಬೀರುತ್ತಿದ್ದಳು. ಬಟ್ಟಲನ್ನು ಪುರುಷನ ಬಳಿಗೆ ತೆಗೆದುಕೊಂಡು ಹೋಗಿ ಬಟ್ಟಲಿನಲ್ಲಿದ್ದ ಮಕರಂದವನ್ನು ಇಬ್ಬರೂ ಹಂಚಿಕೊಂಡು ಸವಿಯುತ್ತಿದ್ದರು. ಮಕರಂದದ ಸವಿಯನ್ನು ತೊರೆದು ಇರುವವರಲ್ಲ ಎಂಬಂತೆ ಇಬ್ಬರೂ ಬಿಡದೆ ಮುಖವಿಟ್ಟು ರುಚಿಯನ್ನು ತಮ್ಮದಾಗಿಸಿಕೊಳ್ಳುತ್ತಿದ್ದರು. ಚಿನ್ನದ ಬಟ್ಟಲಲ್ಲಿ ಮೂಡಿದ ಪುರುಷನ ಬಿಂಬವನ್ನು ಆ ಹೆಣ್ಣು, ಅವಳ ಬಿಂಬವನ್ನು ಆ ಪುರುಷ ಇಬ್ಬರೂ ಕಂಡು ಅನ್ಯೋನ್ಯತೆಯ ಸಂಪ್ರೀತಿ ಭಾವ ಅವರನ್ನು ಆವರಿಸುತ್ತಿತ್ತು. ಬಟ್ಟಲಲ್ಲಿ ತುಂಬಿರುವ ಮಕರಂದ ಮುಗಿದುಹೋದರೆ ಜೊತೆಜೊತೆಗೆ ಅದನ್ನು ಸವಿಯುವ ಗಳಿಗೆಯದು ಮುಗಿದುಹೋಗುವುದು ಎಂಬ ಯೋಚನೆ ಬಂದ ಕ್ಷಣವೇ ಆತುರಾತುರವಾಗಿ ರಸವನ್ನು ಹೀರುವುದನ್ನು ನಿಲ್ಲಿಸುತ್ತಿದ್ದರು. ಬೇಕುಬೇಕೆಂದೇ ವಿಳಂಬ ಮಾಡುತ್ತಿದ್ದರು. ಜೊತೆಜೊತೆಗೆ ಸವಿವ ರಸಗಳಿಗೆಯದು ಅವರಿಗೆ ಮುದವನ್ನು ನೀಡುತ್ತಿತ್ತು.  ಮನಸೆಳೆಯುವ ರತಿಕೇಳಿಯಲ್ಲಿ ತಲ್ಲೀನರಾಗುತ್ತಿದ್ದರು. ಹೆಣ್ಣು ತನ್ನ ತುಟಿಯ ಸಿಹಿರಸವನ್ನು ಕುಡಿಸಿ ಪುರುಷನನ್ನು ತಣಿಸುತ್ತಿದ್ದರು. ಮಿಲನದಲ್ಲಿ ಮನವದು ಮುಳುಗಿಹೋಗಿ ಸುಖ ಅವರದ್ದಾಗುತ್ತಿತ್ತು. ಕಾಮಕಲೆಗಳಲ್ಲಿ ಪರಿಣತಳಾದ ಹೆಣ್ಣು ಈ ಮೂಲಕ ಉನ್ನತ ನೆಮ್ಮದಿಯನ್ನು ತನ್ನದಾಗಿಸಿಕೊಳ್ಳುತ್ತಿದ್ದಳು.  ಹಾಗಿದ್ದಾಗಲೇ ಅವಳ ಅಧರದ ಸ್ಪರ್ಶಕ್ಕೆ ಸಿಲುಕಿ ವಿಷವಾದ ಆ ಮಕರಂದ ಅವನಿಗೆ ಪ್ರಾಣಸಂಕಟವನ್ನು ಕೊಡುವ ಕಾಟವನ್ನು ಆರಂಭಿಸುತ್ತಿತ್ತು. ಇನ್ನೇನು ಮರಣ ತನ್ನನ್ನು ಬಂದು ಅಪ್ಪಿಕೊಳ್ಳುತ್ತದೆ ಎಂದು ಬೆದರಿದ ಪುರುಷ ಮಧ್ಯೆಯೇ ಕಾಮಕೇಳಿಯನ್ನು ನಿಲ್ಲಿಸಿಬಿಡುತ್ತಿದ್ದ. ತಕ್ಷಣವೇ ಅವನ ಚರಣಕ್ಕೆ ಎರಗಿ, ಒಪ್ಪಿಸುವ ನಾಟಕವನ್ನಾಡುತ್ತಿದ್ದಳು. ದೈನ್ಯತೆಯನ್ನು ತೋರಿಸುತ್ತಿದ್ದಳು. ಕರುಣೆ ನೋಟ ಹರಿಸುತ್ತಿದ್ದಳು. ಅದಕ್ಕೂ ಅವನು ಸಹಿಸದವನಾದರೆ ಬೊಬ್ಬೆ ಹೊಡೆದು ಅವನನ್ನು ಹೊಡೆಯುತ್ತಿದ್ದಳು, ಕೊಲ್ಲುತ್ತಿದ್ದಳು. ಕೈಗಳಿಂದ ಬಡಿದು ಪ್ರಾಣ ಹೋಗುವವರೆಗೂ ಅವಳು ಸುಮ್ಮನಾಗುತ್ತಿರಲಿಲ್ಲ.  ಸಂಪಿಗೆ ಹೂವಿಗೆ ಮನಸೋತು, ಅದರ ಆಸ್ವಾದನೆಗೆ ಬಂದು, ಹೂ ಬಾಡುವವರೆಗೂ ಮಕರಂದವನ್ನು ಹೀರಿಕೊಂಡಿದ್ದು, ಕೊನೆಗೆ ಅದರೊಳಗಡೆಯೇ ಸಿಲುಕಿ ಮರಣವನ್ನಪ್ಪುವ ದುಂಬಿಯಂತಹ ಸ್ಥಿತಿ ಸ್ತ್ರೀರಾಜ್ಯಕ್ಕೆ ಬಂದ ಪುರುಷರದ್ದು. ಅಲ್ಲಿಗೆ ಬಂದ ಎಲ್ಲಾ ಪುರುಷರಿಗೂ ಇದೇ ಅವಸ್ಥೆ ಒದಗಿಬರುತ್ತಿತ್ತು. ಅಲ್ಲಿದ್ದ ಎಲ್ಲಾ ಮಹಿಳೆಯರೂ ಇದೇ ತೆರದಲ್ಲಿದ್ದರು.  ಹೀಗೆ ಪುರುಷರನ್ನು ಸಾಯಿಸಿದ ಕೆಲವು ಮಹಿಳೆಯರು ತಿಂಗಳು ಕಳೆದಾಗ ಅಗ್ನಿಪ್ರವೇಶ ಮಾಡುತ್ತಿದ್ದರು. ಇನ್ನೂ ಕೆಲವರು ಹೆಣ್ಣುಮಗುವಿಗೆ ಜನ್ಮ ನೀಡುತ್ತಿದ್ದರು. ಹೀಗೆ ಅಲ್ಲಿಯ ಸ್ತ್ರೀಸಂತತಿ ಬೆಳೆಯುತ್ತಲೇ ಬಂದಿತ್ತು. ಹೀಗೆ ವಿಷಾಂಗನೆಯರಾಗಿದ್ದ ಆ ರಾಜ್ಯಕ್ಕೆ ಪ್ರಮೀಳೆ ಎನ್ನುವವಳು ಅರಸಿಯಾಗಿದ್ದಳು.  ನನ್ನ ಜೊತೆಗಿದ್ದವರನ್ನು ಎಚ್ಚರಿಸದೇ ಇದ್ದರೆ ಅಪಾಯವಾಗುತ್ತದೆ ಎನ್ನುವುದು ನನಗೆ ದೃಢವಾಗಿತ್ತು. ಇದುವರೆಗೂ ಪರಾಕ್ರಮವನ್ನಿಟ್ಟುಕೊಂಡು ಯುದ್ಧ ಹೂಡಿದ್ದ ನಾವು ಇದೀಗ ಸಂಪೂರ್ಣ ಬುದ್ಧಿವಂತಿಕೆಯಿAದ, ವಿವೇಚನೆಯಿಂದ ನಡೆದುಕೊಂಡು ಮುನ್ನಡೆಯಬೇಕಿತ್ತು. “ಇಲ್ಲಿನವರು ವಿಷಕನ್ನಿಕೆಯರು. ಕಂಡ ಕೂಡಲೇ ಆಕರ್ಷಿಸುತ್ತಾರೆ. ಅವರೆಡೆಗೆ ಮಾರುಹೋದರೆ ನಿಮ್ಮ ಆಯುಷ್ಯವನ್ನೇ ಅಪಹರಿಸಿಬಿಡುತ್ತಾರೆ. ಕಾಮಕ್ರೀಡೆಯಲ್ಲಿ ಆಸಕ್ತಿ ವಹಿಸದೆ ಬುದ್ಧಿವಂತರಾಗಿರಬೇಕು” ಎಂದು ಹೇಳಿ ಜಾಗೃತಿ ಮೂಡಿಸಿದೆ ನಮ್ಮವರಲ್ಲಿ. ಅರಸಿ ಪ್ರಮೀಳೆ ನಮ್ಮ ಕುದುರೆಯನ್ನು ಕಟ್ಟಿಹಾಕುವ ಲಕ್ಷಣ ತೋರಿತು.    ಡಾ. ವಿಶ್ವನಾಥ ಎನ್ ನೇರಳಕಟ್ಟೆ      

Read Post »

ಅಂಕಣ ಸಂಗಾತಿ, ವೀಣಾ-ವಾಣಿ

ಅಂಕಣ ಸಂಗಾತಿ ವೀಣಾ ವಾಣಿ ವೀಣಾ ಹೇಮಂತ್‌ ಗೌಡ ಪಾಟೀಲ್ ಪರಿಸರ ದಿನಾಚರಣೆ..ಒಂದು ದಿನಕ್ಕೆ ಮಾತ್ರ ಸೀಮಿತವಾಗದಿರಲಿ  ಒಂದೆರಡು ದಿನಗಳ ಹಿಂದೆ ಪರಿಸರ ದಿನಾಚರಣೆಯಿದ್ದು ಇದನ್ನು ಕಡ್ಡಾಯವಾಗಿ ಆಚರಿಸಲೇಬೇಕು ಎಂಬ ಕಾರಣಕ್ಕಾಗಿ ಬಹುತೇಕ ಎಲ್ಲಾ ಸರಕಾರಿ, ಅರೆ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳು ಸಸಿಯನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.ಪತ್ರಿಕೆಯವರು ಮತ್ತೊಂದು ಹೆಜ್ಜೆ ಮುಂದೆ ಹೋಗಿ ಹಸಿರು ಬಣ್ಣದ ಅಕ್ಷರಗಳಲ್ಲಿ ಪತ್ರಿಕೆಯನ್ನು ಪ್ರಿಂಟ್ ಮಾಡುವ ಮೂಲಕ ತಮ್ಮ ಪರಿಸರ ಪ್ರೇಮವನ್ನು ಮೆರೆದರು.  ಇನ್ನು ಮಹಿಳಾಮಣಿಯರು ಹಸಿರು ರಂಗಿನ ದಿರಿಸುಗಳನ್ನು ಧರಿಸಿ ಪರಿಸರ ದಿನಾಚರಣೆಯನ್ನು ಆಚರಿಸಿ ಅದರ ಫೋಟೋ ತೆಗೆದು ತಮ್ಮ ವಾಟ್ಸಪ್ ಸ್ಟೇಟಸ್ ಗಳಲ್ಲಿ ಹಾಕಿಕೊಂಡು ಸಂಭ್ರಮಿಸಿದರು.  ಎಲ್ಲವೂ ಚಂದ! ನಿಜ ಪರಿಸರ ದಿನಾಚರಣೆಯನ್ನು ಕಡ್ಡಾಯವಾಗಿ ಮಾಡಲೇಬೇಕು ಎಂಬ ಅನಿವಾರ್ಯತೆ ಇಲ್ಲದೆ ಹೋದರೆ ನಾವು ಪರಿಸರಕ್ಕೆ ಏನು ಕೊಟ್ಟಿದ್ದೇವೆ ಎಂಬುದರ ಕುರಿತು ಒಂದೈದು ನಿಮಿಷ ಮನದಲ್ಲೇ ಯೋಚಿಸಿದರೆ ಶೂನ್ಯ ಫಲಿತಾಂಶ ನಮ್ಮ ಮುಂದೆ ಕಾಣಬಹುದು.ಯಾರನ್ನೂ ಹೀಯಾಳಿಸುವ, ತಮಾಷೆ ಮಾಡುವ ಅವರ ಕುರಿತು ನಿರ್ಣಾಯಾತ್ಮಕವಾಗಿ ಹೇಳಿಕೆ ಕೊಡುವ ಇಲ್ಲವೇ ಅವರ ಕ್ರಿಯೆಯನ್ನು ಹಂಗಿಸುವ ಉದ್ದೇಶ ನನಗಿಲ್ಲ…. ಆದರೂ ಕೆಲ ಸಂಗತಿಗಳನ್ನು ನಮ್ಮದೇ ನಿಲುಕಿನಲ್ಲಿ  ನಾವು ವೈಯಕ್ತಿಕವಾಗಿ ಕೈಗೊಳ್ಳುವ ನೂರೆಂಟು ಸಾಧ್ಯತೆಗಳು ಇರುವಾಗ ಆ ನಿಟ್ಟಿನಲ್ಲಿ ನಾವು ಮುಂದುವರೆದರೆ ಪರಿಸರವನ್ನು ಇನ್ನಷ್ಟು ಸಮರ್ಪಕವಾಗಿ ಉಳಿಸಿಕೊಳ್ಳಬಹುದು ಎಂಬ ಆಶಯ ನನ್ನದು. ಈಗಾಗಲೇ ಪರಿಸರ ವಿನಾಶದ ದುಷ್ಪರಿಣಾಮಗಳನ್ನು ನಾವು ನೋಡುತ್ತಿದ್ದೇವೆ . ಹಿತಕರವಾದ ಬೇಸಿಗೆ ನಮ್ಮ ಪಾಲಿಗೆ ದೂರ…. ಕುರಿಯುತ್ತಿರುವ ಝಳ, ನಮ್ಮನ್ನು ಆಹುತಿ ತೆಗೆದುಕೊಳ್ಳದಿದ್ದರೆ ಸಾಕು ಎಂಬಂತಹ ಬಿಸಿಲು ಒಂದೆಡೆ ಕಾಡುತ್ತಿದ್ದರೆ,, ಬೇಕಿರಲಿ ಬೇಡದೆ ಇರಲಿ ಧೋ ಎಂದು ಸುರಿಯುತ್ತಿರುವ ಅಕಾಲ ಮಳೆ ಅಲ್ಲಲ್ಲಿ ನೆರೆ ಹಾವಳಿಯಿಂದ ಬೆಳೆ ಮನೆಗಳನ್ನು ತನ್ನ ರುದ್ರ ನರ್ತನಕ್ಕೆ ಈಡು ಮಾಡಿ ಹಾಳುಗೆಡವುತ್ತಿದೆ…. ಬದುಕಲು ಸಾಧ್ಯವೇ ಇಲ್ಲ ಎಂಬಂತಹ ಮಾರಣಾಂತಿಕ ತೊಂದರೆಗಳಾದ ಹೃದಯ ತೊಂದರೆ, ಅಕಾಲ ಮರಣಗಳು ಚಳಿಯ ಕಾರಣದಿಂದ ಉಂಟಾಗುತ್ತಿದ್ದು, ಸಹಿಸಲಸಾಧ್ಯವಾದ ಚಳಿಯಿಂದ ಜನರು ಸಾಯುತ್ತಿರುವ ಘಟನೆಗಳನ್ನು ಕೂಡ ನಾವು ಪತ್ರಿಕೆಗಳಲ್ಲಿ ಓದುತ್ತಿದ್ದೇವೆ. ಈಗಾಗಲೇ ಪರಿಸ್ಥಿತಿ ಸಾಕಷ್ಟು ವಿಷಮಿಸಿದ್ದು ಇನ್ನೂ ಹೆಚ್ಚಿನ ಅನಾಹುತಗಳು ಉಂಟಾಗುವ ಮುನ್ನವೇ ಜಾಗೃತರಾಗಬೇಕಾದ ಪರಿಸ್ಥಿತಿ ನಮ್ಮದು ಆ ನಿಟ್ಟಿನಲ್ಲಿ ಕೆಲ ಪರಿಹಾರ ಕ್ರಮಗಳನ್ನು ನಾವು ಕೈಗೊಳ್ಳಲೇಬೇಕಾಗಿದೆ. ಅಯ್ಯೋ ! ಅದನ್ನೆಲ್ಲ ಎಲ್ಲಿ ಮಾಡೋಕಾಗುತ್ತೆ ಉಳಿದವರೆಲ್ಲ ಮಾಡ್ಲಿ ನಮ್ಮ ಕೈಲಿ ಆಗೋದಿಲ್ಲ ಎಂಬ ನಿಟ್ಟಿನಲ್ಲಿ ಜನರು ವಿಸ್ಮೃತಿಯಲ್ಲಿ ಸಿಲುಕಿದ್ದಾರೆ ಅಂತಹವರಿಗೆ ಮಾಡುವ ಮನಸ್ಸಿದ್ದರೂ ಅವಕಾಶಗಳ ಅರಿವು ಹಾಗೂ ಅನಿವಾರ್ಯತೆಯನ್ನು ಮೂಡಿಸುವುದು ಮಾತ್ರ ನನ್ನ ಉದ್ದೇಶ.ಪರಿಸರ ದಿನಾಚರಣೆ ಇರುವುದು ಕೇವಲ ಗಿಡ ಮರಗಳನ್ನು ನೀಡಲು ಮಾತ್ರವಲ್ಲ. ಪರಿಸರ ದಿನಾಚರಣೆಯ ಮುಖ್ಯ ಉದ್ದೇಶ ನಾವು ಇರುವ ಈ ಬೃಹತ್ ಬ್ರಹ್ಮಾಂಡದ ಎಲ್ಲಾ ಜೀವರಾಶಿಗಳಿಗೂ ನಮ್ಮಷ್ಟೇ ಇಲ್ಲಿ ಬದುಕುವ ಹಕ್ಕು ಇದೆ ಎಂಬುದನ್ನು ಅರಿತುಕೊಳ್ಳಲು. ಉಳಿದೆಲ್ಲ ಜೀವಿಗಳಿಗೆ ಮನುಷ್ಯನಷ್ಟು ಬುದ್ಧಿಶಕ್ತಿ ಇಲ್ಲ ನಿಜ…ಆದರೆ ಜಗತ್ತಿನ ಜೀವಸಂಕುಲಗಳಲ್ಲಿಯೇ ಅತ್ಯಂತ ಬುದ್ಧಿಶಾಲಿ ಎಂದು ಬೀಗುವ ಮನುಷ್ಯ ತಾನೇ ತೋಡಿದ ಕಂದಕಕ್ಕೆ ತಾನು ಮಾತ್ರವಲ್ಲದೆ ಇಡೀ ಜೀವ ಸಂಕುಲವನ್ನು ಹಂತ ಹಂತವಾಗಿ ತಳ್ಳಿ ಮಾರಣಾಂತಿಕ ತೊಂದರೆಯಲ್ಲಿ ಸಿಲುಕಿಸುವ ಪ್ರಕ್ರಿಯೆಗೆ ಈಗಾಗಲೇ ತೊಡಗಿದ್ದಾನೆ.ಆರಂಭದಲ್ಲಿ ಆಧುನಿಕತೆಯ ಮೆರುಗಿನಲ್ಲಿ ಬಳಸಿ ಬಿಸುಡುವ ವಸ್ತುಗಳ ಶೋಕಿಯಲ್ಲಿ,, ಬಿಗಿಯಾದ ನೀತಿ ನಿಯಮಗಳ ಅನುಷ್ಠಾನ ಇಲ್ಲದ ಕಾರಣಕ್ಕಾಗಿ ಈ ಪ್ರವಾಹ ಚಿಕ್ಕದಾಗಿದ್ದರೂ ಇದೀಗ ಬೃಹದಾಕಾರದ ಸಮಸ್ಯೆಯಾಗಿ ಉಲ್ಬಣಗೊಂಡಿದೆ.ಪ್ರತಿಯೊಂದು ಹಳ್ಳಿಯ ಗ್ರಾಮ ಪಂಚಾಯಿತಿಯಿಂದ ಹಿಡಿದು ದಿಲ್ಲಿಯವರೆಗಿನ ಮಹಾನಗರ ಪಾಲಿಕೆಗಳವರೆಗೆ ಸಮಸ್ಯೆ ಇರುವುದು ಕಸ ವಿಲೇವಾರಿ. ನೀವು ಯಾವುದೇ ಊರಿನ ಹೊರ ಭಾಗದಲ್ಲಿ ಹೋಗಿ ನೋಡಿದರೆ ರಸ್ತೆಯ ಬದಿಯಲ್ಲಿ ನೂರಾರು ಟ್ರ್ಯಾಕ್ಟರ್ ಗಳಷ್ಟು ಕಸ ಬಿದ್ದಿರುತ್ತದೆ. ಮರುಬರಕ್ಕೆ ಮಾಡಲು ಸಾಧ್ಯವಾಗದ ಪ್ಲಾಸ್ಟಿಕ್ ವಸ್ತುಗಳ ರಾಶಿ ಅಲ್ಲಿರುತ್ತದೆ. ಹರಿದು ಹೋದ ರಬ್ಬರ್ ಟಾಯರ್, ಟ್ಯೂಬ್, ಬ್ಯಾಗ್ ಗಳು, ನೀರಿನ ಬಾಟಲಿಗಳು ಪೇಸ್ಟಿನಿಂದ ಹಿಡಿದು ಬೃಹದಾಕಾರದ ತ್ಯಾಜ್ಯಗಳು ಊರ ಹೊರಗಿನಿಂದಲೇ ನಮ್ಮನ್ನು ಸ್ವಾಗತಿಸುತ್ತವೆ.ಸರ್ಕಾರ ಅದೆಷ್ಟೇ ಪ್ರಯತ್ನ ಪಟ್ಟರೂ ಸ್ವಚ್ಛ ಭಾರತ ಯೋಜನೆಯನ್ನು ಕೈಗೊಂಡು ಮನೆಗೊಂದು ಶೌಚಾಲಯವನ್ನು ನಿರ್ಮಿಸಿ ಕೊಟ್ಟರೂ ಕೂಡ 21ನೇ ಶತಮಾನದಲ್ಲಿಯು ಜನರು ಬಯಲು ಬಹಿರ್ದೆಸೆಗೆ ಹೋಗುವ ಮೂಲಕ ಪರಿಸರವನ್ನು ಹಾಳುಗೆಡವುತ್ತಿದ್ದಾರೆ.ಇನ್ನು ಚಿಕ್ಕ ಪಾನ್ ಶಾಪು ಗಳಿಂದ ಹಿಡಿದು ದೊಡ್ಡ ಮಾಲ್ಗಳವರೆಗೆ ಎಲ್ಲ ಕಡೆ ಪ್ಲಾಸ್ಟಿಕ್ನದ್ದೇ ಕಾರುಬಾರು.ಬಣ್ಣ ಬಣ್ಣದ ಒಡೆಯದ ಚಿತ್ತಾಕರ್ಷಕ ಪ್ಲಾಸ್ಟಿಕ್ ಲೋಟ, ಬಟ್ಟಲು, ಬಳಸಿ ಬಿಸುಟಬಹುದಾದ ವಸ್ತುಗಳು ಒಂದೆರಡಲ್ಲ. ಪ್ಲಾಸ್ಟಿಕ್ ವಸ್ತುಗಳನ್ನು ಮಾರುವ ಅಂಗಡಿಕಾರರು ಅಂತಿಮವಾಗಿ ಪ್ಯಾಕ್ ಮಾಡಿ ಕೊಡುವಾಗ ಮಾತ್ರ ಸರ್/ಮೇಡಂ ನಾವು ಪ್ಲಾಸ್ಟಿಕ್ ಕವರ್ ಬಳಸುವುದಿಲ್ಲ ಪೇಪರ್ ಬ್ಯಾಗ್ ನಲ್ಲಿ ಹಾಕಿ ಕೊಡೋಣವೇ ಎಂದು ಕೇಳುವುದು ವಿಪರ್ಯಾಸವಲ್ಲವೇ ? ಪರಿಸರವನ್ನು ಉಳಿಸಿ ಎಂದು ಒಕ್ಕೊರಳಿನಿಂದ ಹೋಗುವ ಎಲ್ಲಾ ಕಡೆಗಳಲ್ಲಿ ಕಣ್ಣು ಕುಕ್ಕುವ ಬಲ್ಬ್ ಗಳನ್ನು, ಟ್ಯೂಬ್ ಗಳನ್ನು ಹಾಕಿ ಸೂರ್ಯನ ಬೆಳಕಿಗೆ ಸವಾಲೊಡ್ಡುವಂತೆ ಪ್ರಕಾಶಮಾನವಾಗಿಸುವರು. ರಸ್ತೆಯ ಅಗಲೀಕರಣ ಊರನ್ನು ಸುಂದರವಾಗಿಸುವ ನಿಟ್ಟಿನಲ್ಲಿ ಬೃಹದಾಕಾರದ ಕಟ್ಟಡಗಳನ್ನು ಕರುಣಿಸಿ ನಿರ್ಮಿಸುವ ಸಲುವಾಗಿ ನೂರಾರು ವರ್ಷಗಳಿಂದ ನಮಗೆ ಗಾಳಿ ನೆರಳನ್ನು ನೀಡುವುದರ ಜೊತೆಗೆ ನೂರಾರು ಸಾವಿರಾರು ಪಕ್ಷಿಗಳಿಗೆ ಆಶ್ರಯ ತಾಣವಾಗಿರುವ ಮರಗಳನ್ನು ಕಡಿದು ಉರುಳಿಸುವುದು ಪರಿಸರ ನಾಶವಲ್ಲದೆ ಮತ್ತಿನ್ನೇನು ? ಯಾವುದೇ ಒಂದು ಆಧುನಿಕತೆಯ ಭರಾಟೆ ತನ್ನ ಅಂತಿಮ ಹಂತದಲ್ಲಿ ತೀವ್ರ ಪರಿಣಾಮವನ್ನು ಬೀರಿದಾಗ ಉಂಟಾಗುವ ಅಲ್ಲೋಲಕಲ್ಲೋಲದಲ್ಲಿ ನಾವು ಮನುಷ್ಯ ಮಾತ್ರಠು ಯೋಚಿಸಲು ಆರಂಭಿಸುತ್ತೇವೆ.ಇವೆಲ್ಲವೂ ದೊಡ್ಡ ಮಟ್ಟದಲ್ಲಾಯಿತು… ನಮ್ಮ ಹಿರಿಯರು ನಮಗೆ ಕೊಟ್ಟ ಒಳ್ಳೆಯ ವಾತಾವರಣದ ಕೊಡುಗೆಯನ್ನು ನಾವು ಮಕ್ಕಳಿಗೆ ಉಳಿಸಿ ಕೊಡಬೇಕಾಗಿರುವುದು ನಮ್ಮದೇ ಜವಾಬ್ದಾರಿ ಆ ಜವಾಬ್ದಾರಿಯ ನಿರ್ವಹಣೆಯಲ್ಲಿ ನಾವು ಬಹುತೇಕ ಎಡವಿದ್ದೇವೆ ನಿಜ, ಆದರೆ ಮತ್ತೆ ಸಂಭಾಳಿಸಿಕೊಂಡು ನಿಲ್ಲಲೇಬೇಕಾದ ತುರ್ತು ಪರಿಸ್ಥಿತಿ ಒದಗಿದೆ. ಈ ನಿಟ್ಟಿನಲ್ಲಿ ಕನಿಷ್ಠ ಪಕ್ಷ ಸುಶಿಕ್ಷಿತರು, ನಾಗರಿಕರು ಎಂದೆನಿಸಿಕೊಂಡಿರುವ ನಾವುಗಳು ನಮ್ಮ ಮನೆಯ ಮಟ್ಟಿಗೆ ಪರಿಸರವನ್ನು ಹೇಗೆ ಕಾಯ್ದುಕೊಳ್ಳಬಹುದು ಎಂದು ನೋಡೋಣ.* ಮನೆಯಿಂದ ಹೊರಗೆ ಅಂಗಡಿಗೆಂದೇ ಹೋಗುವಾಗ ಬಟ್ಟೆಯ ಕೈ ಚೀಲಗಳನ್ನು ಒಯ್ಯುವುದು ವಿಹಿತ. ಯಾವುದೇ ಸಮಯದಲ್ಲಿಯೂ ನೀವು ಏನನ್ನಾದರೂ ಖರೀದಿಸಬಹುದು ಎಂಬ ಮನಸ್ಥಿತಿ ನಿಮ್ಮದಾಗಿದ್ದರೆ ಬಟ್ಟೆಯ ಬ್ಯಾಗ್ ನ ಜೊತೆ ಒಂದೆರಡು ಡಬ್ಬಗಳನ್ನು ಒಯ್ಯುವುದು ಒಳ್ಳೆಯದು, ಅದು ಸಾಧ್ಯವಾಗದಿದ್ದರೆ ಅಂಗಡಿಗಳಲ್ಲಿ ಕಾಗದ ಪೊಟ್ಟಣದಲ್ಲಿ ಕಟ್ಟಿಕೊಡಲು ಕೇಳಿಕೊಳ್ಳಬೇಕು. ಮೊದಮೊದಲು ಅಂಗಡಿಕಾರರು ನಿಮ್ಮನ್ನು ತಮಾಷೆ ಮಾಡಬಹುದು ಅಯ್ಯೋ! ಅದನ್ನೆಲ್ಲ ಯಾರು ಮಾಡ್ತಾರೆ ಸರ್, ಇದನ್ನೇ ತಗೊಂಡು ಹೋಗಿ ಎಂದು ನಿಮಗೆ ಅಸಡ್ಡೆಯಿಂದ ಉತ್ತರಿಸಬಹುದು… ಇದನ್ನು ಅವಮಾನ ಎಂದು ಭಾವಿಸಬೇಡಿ. ನೀವು ನಿಮ್ಮ ನಿಲುವಿಗೆ ಬದ್ಧರಾದರೆ ಮುಂದಿನ ದಿನಮಾನಗಳಲ್ಲಿ ನಿಮ್ಮನ್ನು ಮತ್ತಷ್ಟು ಜನರು ಅನುಸರಿಸಬಹುದು. ವೈಯುಕ್ತಿಕ ನೆಲೆಯಲ್ಲಿ ನಾವು ಇದನ್ನು ಖಂಡಿತವಾಗಿಯೂ ಮಾಡಲು ಸಾಧ್ಯವಿದೆ.* ಹಗಲಿನ ಹೊತ್ತಿನಲ್ಲಿ ಮನೆಯ ಕಿಟಕಿ ಬಾಗಿಲುಗಳನ್ನು ತೆರೆದು ಹೊರಗಿನಿಂದ ಬರುವ ಸೂರ್ಯನ ಬೆಳಕು ಹಾಗೂ ತಾಜಾ ಹವೆಯನ್ನು ಉಸಿರಾಡಲು ರೂಢಿಸಿಕೊಳ್ಳಬೇಕು. ಅನವಶ್ಯಕವಾಗಿ ಲೈಟ್ಗಳನ್ನು ಉರಿಸುವುದು ಬೇಕಾಗಿಲ್ಲ. ತೀರ ಅನಿವಾರ್ಯವಾದಲ್ಲಿ ಮಂದ ಬೆಳಕನ್ನು ಸೂಸುವ ಅತ್ಯಂತ ಕಡಿಮೆ ಯೂನಿಟ್ ಬಳಕೆಯಾಗುವ ನವೀಕೃತ ಮಾದರಿಯ ಬಲ್ಬ್ ಗಳನ್ನು ಬಳಸಬೇಕು.‘ಒಂದು ಯೂನಿಟ್ ಉಳಿತಾಯ ಒಂದು ಯೂನಿಟ್ ಉತ್ಪಾದನೆಗೆ ಸಮ ‘ ಎಂಬ ಮಾತು ಇಂದಿಗೂ ಚಾಲ್ತಿಯಲ್ಲಿ ಇಟ್ಟುಕೊಳ್ಳಲೇಬೇಕು. ನಮಗೆ ಉತ್ಪಾದನೆ ಮಾಡುವ ಸಾಮರ್ಥ್ಯವಿಲ್ಲ ಎಂದಾದಲ್ಲಿ ಬಳಸುವಾಗ ತುಸು ಎಚ್ಚರ ವಹಿಸುವುದು ಒಳಿತು.*ಆಹಾರವನ್ನು ಸಾಧ್ಯವಾದಷ್ಟು ತಾಜಾ ಆಗಿ ತಯಾರಿಸಿ ಸೇವಿಸಬೇಕು ಪದೇ ಪದೇ ಬಿಸಿ ಮಾಡುವುದರಿಂದ ಆಹಾರದಲ್ಲಿರುವ ಜೀವಸತ್ವಗಳು ತಮ್ಮ ಶಕ್ತಿಯನ್ನು ಕಳೆದುಕೊಂಡು ಆಹಾರವು ಸತ್ವರಹಿತವಾಗುತ್ತದೆ.. ಅತಿಯಾಗಿ ಅಡುಗೆ ತಯಾರಿಸಿ ಅದನ್ನು ಚೆಲ್ಲುವುದರಲ್ಲಿ ಅರ್ಥವಿಲ್ಲ. ಪ್ರತಿದಿನವೂ ಹಳ್ಳಿಯಿಂದ ದಿಲ್ಲಿಯವರೆಗೆ ಉಣ್ಣಲು ಸಾಧ್ಯವಾಗದ ರೀತಿಯಲ್ಲಿ ಟನ್ನುಗಟ್ಟಲೆ  ಆಹಾರ ಪದಾರ್ಥಗಳು ಕಸದ ತೊಟ್ಟಿಗೆ ಸೇರುವುದರಲ್ಲಿ ನಮ್ಮ ಅಳಿಲು ಪಾಲು ಸಲ್ಲುವುದನ್ನು ತಪ್ಪಿಸಬೇಕು. ಈ ಹಿಂದೆ ಉಳಿಕೆ ಆಹಾರವು ಮನೆಯ ಕೆಲಸದವರಿಗೆ ಮರುದಿನಕ್ಕೆ, ದನ ಕರುಗಳಿಗೆ ಮುಸುರೆಯಾಗಿ ಸಾರ್ಥಕತೆಯನ್ನು ಪಡೆಯುತ್ತಿತ್ತು ಆದರೆ ಆಧುನಿಕ ಭರಾಟೆಯಲ್ಲಿ ಪಶು ಸಂಗೋಪನೆಯನ್ನು ಕೈ ಬಿಟ್ಟಿರುವ ನಾವುಗಳು ಆಹಾರವನ್ನು ನೇರವಾಗಿ ಕಸದ ತೊಟ್ಟಿಗೆ ಚೆಲ್ಲುತ್ತಿದ್ದೇವೆ. ಇಡೀ ದೇಶದಲ್ಲಿ ಒಂದು ದಿನ ಕಸದ ತೊಟ್ಟಿಗೆ ಬಿಸಾಡುವ ಆಹಾರ ಅದೆಷ್ಟೋ ಕುಟುಂಬಗಳನ್ನು ಪಾಲಿಸಬಲ್ಲದು ಎಂಬ ಸತ್ಯದ ಅರಿವು ನಮಗಿರಬೇಕು… ಉತ್ಪಾದನಾ ಸಾಮರ್ಥ್ಯವಿಲ್ಲದವರಿಗೆ ಹಾಳು ಮಾಡುವ ಹಕ್ಕಿಲ್ಲ… ಅದು ನಮ್ಮ ವೈಯಕ್ತಿಕ ದುಡ್ಡಿನಿಂದ ಖರೀದಿಸಿದ್ದಾದರೂ ಸರಿಯೇ ? ಎಂಬ ಪ್ರಜ್ಞೆಯನ್ನು ಹೊಂದಿ ಅಂತೆಯೇ ನಡೆದುಕೊಳ್ಳಬೇಕು. ಇದರಿಂದ ಮನೆಯ ಖರ್ಚಿನಲ್ಲಿ ಮಿತವ್ಯಯ ಸಾಧಿಸಬಹುದು. ಇಂಧನವನ್ನು ಉಳಿಸಬಹುದು…. ತನ್ಮೂಲಕ ಪರಿಸರದ ಸಂರಕ್ಷಣೆಗೆ ನಮ್ಮ ಪಾಲನ್ನು ಸಲ್ಲಿಸಬಹುದು.* ಈ ಹಿಂದೆ ಅಮ್ಮಂದಿರು ಕಡ್ಡಾಯವಾಗಿ ತಮ್ಮ ಬಳಿ ಕರ ವಸ್ತ್ರವನ್ನು ನ್ಯಾಪ್ಕಿನ್ ಗಳನ್ನು ಇಟ್ಟುಕೊಳ್ಳುತ್ತಿದ್ದರು. ಆದರೆ ಇದೀಗ ಬಳಸಿ ಬಿಸಾಡಬಹುದಾದ ನ್ಯಾಪ್ಕಿನ್ಗಳನ್ನು ಎಗ್ಗಿಲ್ಲದೆ ಬಳಸಿ ಎಸೆಯುತ್ತಾರೆ. ಒಂದು ದಿನಕ್ಕೆ ಸರಿ ಸುಮಾರು 37 ಸಾವಿರ ಮರಗಳನ್ನು ಕೇವಲ ಟಿಶ್ಯೂ ಪೇಪರ್ ತಯಾರಿಕೆಗೆ ಕಡಿದು ಬಳಸುತ್ತಾರೆ ಎಂದರೆ ನೀವೇ ಊಹಿಸಿಕೊಳ್ಳಿ…. ಒಂದು ವರ್ಷಕ್ಕೆ ಎಷ್ಟು ಮರಗಳ ಮಾರಣಹೋಮವಾಗುತ್ತದೆ ಎಂದು. ಪ್ರಶ್ನೆ ಇರುವುದು ಅದೇ ಪ್ರಮಾಣದಲ್ಲಿ, ಅದೇ ತುರ್ತಿನಲ್ಲಿ, ಅಷ್ಟೇ ಪ್ರಮಾಣದ ಗಿಡಗಳನ್ನು ನಾವು ಬೆಳೆಸಲು ಸಾಧ್ಯವೇ ? ಎಂಬುದು.*ನಮ್ಮ ಹೊಲಗಳಲ್ಲಿ ಹೆಚ್ಚಿನ ಬೆಳೆಯನ್ನು ಪಡೆಯಲೆಂದು ನಾವು ಬಳಸುವ ಕೀಟನಾಶಕಗಳು ನಮ್ಮ ಭೂಮಿಯ ಸತ್ವವನ್ನು ಹೀರಿಕೊಳ್ಳುತ್ತಿವೆ. ನೆಲವನ್ನು ಬಂಜರಾಗಿಸುತ್ತವೆ. ಇದರ ಪರಿಣಾಮವಾಗಿ ನಿಸ್ಸತ್ವ ಆಹಾರವನ್ನು ಸೇವಿಸುತ್ತಿರುವ ನಮ್ಮ ಯುವ ಜನಾಂಗವು ಹತ್ತು ಹಲವಾರು ಆರೋಗ್ಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿವೆ. ಸಂತಾನಹೀನತೆಯ ತೊಂದರೆ ಪ್ರಮುಖವಾಗಿ ತಲೆದೋರುತ್ತಿದೆ. ಸಾಧ್ಯವಾದಷ್ಟು ಸಾವಯವ ಗೊಬ್ಬರವನ್ನು ಬಳಕೆ ಮಾಡಿ ಸತ್ವಯುತ ಆಹಾರ ಬೆಳೆಗಳನ್ನು ಬೆಳೆದು ಭೂಮಿಯ ಫಲವತ್ತತೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಯೋಚಿಸಲೇಬೇಕು. ಈ ಹಿಂದಿನವರು ಮಾಡುವಂತೆ ಉತ್ತಮ ತಳಿಯ ಬೀಜಗಳನ್ನು ಕಾಪಿಟ್ಟುಕೊಳ್ಳುವ, ಸಾಂಪ್ರದಾಯಿಕ ಕೃಷಿ ಪದ್ಧತಿಗಳನ್ನು ನಮ್ಮದಾಗಿಸಿಕೊಳ್ಳುವ ವಾರ್ಷಿಕ ಬೆಳೆಗಳ ಜೊತೆಗೆ ತರಕಾರಿ ಬೆಳೆಗಳನ್ನು ಹಣ್ಣು ಹಂಪಲುಗಳನ್ನು ಬೆಳೆಯುವ ಮೂಲಕ ಆದಾಯವನ್ನು ಸರಿ ತೂಗಿಸಬಹುದು…. ಈ ಕೆಲಸದಲ್ಲಿ ತುಸು ಶ್ರಮ ಹೆಚ್ಚಾಗಬಹುದು ಆದರೆ ನಾವು ಸಾಕುವ ಪಶುಗಳೊಂದಿಗಿನ ಒಡನಾಟ ನಮ್ಮ ಮಾನಸಿಕ ನೆಮ್ಮದಿಗೆ ಕಾರಣವಾಗುತ್ತದೆ ಪ್ರಕೃತಿಯೊಂದಿಗಿನ ಸಾಂಗತ್ಯ ಮನಸ್ಸಿಗೆ ಹಿತವಾಗಿರುತ್ತದೆ.* ಈ ಹಿಂದಿನಂತೆ ಪ್ರತಿ ಮನೆಯು ಒಂದು ಪುಟ್ಟ ಹಿತ್ತಲನ್ನು ಹೊಂದಿದ್ದು ಅಲ್ಲಿ ದಿನಬಳಕೆಯ ಹಣ್ಣು ತರಕಾರಿ ಹೂವುಗಳ ಗಿಡಗಳನ್ನು ಬೆಳೆಸಬೇಕು. ಅವಸರಕ್ಕೂ ಒದಗುವ ನೆರಳನ್ನು ಕೊಡುವ ಹಸಿರಿನಿಂದ ಕಣ್ಣು ತಂಪಾಗಿಸುವ ತಣ್ಣನೆಯ ಗಾಳಿಯನ್ನು ನೀಡುವ ಗಿಡಗಳು ಮನೆಯ ಹಿಂದೆ ಹಾಗೂ ಮುಂದೆ ಇರಲೇಬೇಕು  ನಿಸರ್ಗಕ್ಕೆ ಹತ್ತಿರವಾದ ರೀತಿಯಲ್ಲಿ ಮನೆ ಹಾಗೂ ಮನೆಗೆ ಹತ್ತಿದಂತೆ ನಿಸರ್ಗಕ್ಕೆ ಹತ್ತಿರವಾಗುವ ಕೈತೋಟ ಇದ್ದರೆ ಅದು ನಂದನವನವೇ ಸರಿ. ಮನೆಯಲ್ಲಿ ಕೂಡ ಸಾಧ್ಯವಾದಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದನ್ನು ಕೈ ಬಿಡಬೇಕು ಸ್ವಯಂ ಪ್ರೇರಿತರಾಗಿ ಅವುಗಳನ್ನು ದೂರವಿರಿಸುವುದು ಒಳ್ಳೆಯದು. ಇನ್ನು ರಸ್ತೆಗೆ ಇಳಿದರೆ ವಿಪರೀತ ವಾಹನಗಳ ಸಂದಣಿ. ಮನೆಗೆ ನೂರು ಮೀಟರ್ ಹತ್ತಿರವಿರುವ ಅಂಗಡಿ ಮುಂಗಟ್ಟುಗಳಿಗೆ ಹೋಗಲು ಕೂಡ ಟೂ ವೀಲರ್ ಗಳನ್ನು ಬಳಸುವುದನ್ನು ನಿಲ್ಲಿಸಬೇಕು. ನಡೆಯುತ್ತಾ ಹೋಗಿ ದಿನಬಳಕೆಯ ವಸ್ತುಗಳನ್ನು ಖರೀದಿಸುವ ಮೂಲಕ ದೈಹಿಕ ಆರೋಗ್ಯದ ಜೊತೆ ಜೊತೆಗೆ ಗಾಡಿಗೆ ಬಳಸುವ ಇಂಧನದ ಖರ್ಚನ್ನು ಕೂಡ ಉಳಿಸಬಹುದು. ಮನೆಯಲ್ಲಿ

Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಅಕ್ಕ ತಂಗಿಯರ ಪರಸ್ಪರ ಸಾಂತ್ವಾನದ ಕ್ಷಣಗಳು ಸುಮತಿಯ ಅನುಪಸ್ಥಿತಿಯಲ್ಲಿ ಮೂರನೇ ಮಗಳು ತಾಯಿಯ ಬದಲು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲು ಶಾಲೆ ಹೋಗುತ್ತಿದ್ದಳು. ತೋಟದ ಶಾಲೆಯ ಮಕ್ಕಳಿಗೆ ಯಾರಾದರೂ ಹೋಗಿ ಅಕ್ಷರಾಭ್ಯಾಸ ಮಾಡಿಸಲೇ ಬೇಕಾದ ಅನಿವಾರ್ಯತೆ ಇತ್ತು. ಒಂದು ದಿನ ಶಾಲೆಗೆ ರಜೆಯಾದರೂ ಕೂಡಾ ಮರುದಿನ ಮಕ್ಕಳು ಶಾಲೆಗೆ ಬರಲು ಹಿಂಜರಿಯುತ್ತಿದ್ದರು. ಮಕ್ಕಳು ಶಾಲೆಗೆ ಬರದೇ ಹೋದರೆ ತಿಂಗಳ ಸಂಬಳ ಎಲ್ಲಿ ತಪ್ಪಿ ಹೋಗುವುದೋ ಎನ್ನುವ ಭಯ. ಸಂಬಳದಿಂದ ಬರುವ ಹಣದಲ್ಲಿ ತಿಂಗಳು ಪೂರ್ತಿ ಸುಮತಿಯ ಕುಟುಂಬ ಕಳೆಯಬೇಕಿತ್ತು. ಎರಡನೇ ಮಗಳು ಕೆಲಸ ಮಾಡುತ್ತಿದ್ದರೂ ಅವಳಿಗೆ ಬರುವ ಸಂಬಳವೂ ಕಡಿಮೆ ಇತ್ತು. ಈಗ ಸುಮತಿ ಆಸ್ಪತ್ರೆಯಲ್ಲಿ ಇರುವುದರಿಂದ ಖರ್ಚುಗಳು ಸ್ವಲ್ಪ ಹೆಚ್ಚಿತ್ತು. ಸರಕಾರಿ ಆಸ್ಪತ್ರೆ ಆದ್ದರಿಂದ ಅಲ್ಲಿ ವಾರ್ಡ್ ಗೆ ಹಣ ಕಟ್ಟುವ ಅಗತ್ಯ ಇರಲಿಲ್ಲ. ಮಾತ್ರೆ ಔಷಧಿಗಳು ಅಲ್ಲಿಯೇ ಸಿಗುತ್ತಿದ್ದವು. ಹೊರಗಿನಿಂದ ತರಬೇಕೆಂದಿದ್ದರೆ ಎಷ್ಟೇಟಿನ ಲೆಕ್ಕದಲ್ಲಿ ಮೆಡಿಕಲ್ ಸ್ಟೋರ್ ನಿಂದ ಖರೀದಿಸಬಹುದಿತ್ತು. ಆದರೆ ಇನ್ನುಳಿದ ಖರ್ಚನ್ನು ನಿಭಾಯಿಸುವುದು ಕಷ್ಟವಾಗುತ್ತಿತ್ತು. ಗುರುವಾರ ಶಾಲೆಗೆ ರಜೆ ಇದ್ದ ಕಾರಣ ಮೂರನೇ ಮಗಳು ಸುಮತಿಯನ್ನು ನೋಡಲು ಆಸ್ಪತ್ರೆಗೆ ಬಂದಳು. ಇನ್ನೂ ಹದಿನಾರರ ಹರೆಯದ ಹುಡುಗಿ ತೋಟದ ನಿರ್ಜನವಾದ ದಾರಿಯಲ್ಲಿ ಒಬ್ಬಳೇ ಶಾಲೆಗೆ ಹೋಗಿ ಬರಬೇಕಿತ್ತು. ಸುಮತಿ ಆಸ್ಪತ್ರೆಯಲ್ಲಿ ದಾಖಲಾದ್ದರಿಂದ ಮನೆಯಲ್ಲಿಯೂ ಕೂಡ ಅವಳೊಬ್ಬಳೇ ಇರಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಸುಮತಿಯ ಮಕ್ಕಳು ಧೈರ್ಯವಂತರು. ಅನಿವಾರ್ಯತೆಗಳಲ್ಲಿ ತಮ್ಮನ್ನು ತಾವೇ ಸಂಭಾಳಿಸಿಕೊಳ್ಳಲು ಶಕ್ತರಾಗಿದ್ದರು. ಜೀವನದಲ್ಲಿ ಅವರು ಅನುಭವಿಸಿದ ಕಷ್ಟಗಳು ಆವರಿಗೆ ವಿಧಿ ಒಡ್ಡಿರುವ ಸವಾಲುಗಳನ್ನು ಎದುರಿಸಿ ಬದುಕುವ ಪಾಠ ಕಲಿಸಿತ್ತು. ಆದರೂ ಭಯ, ಆತಂಕ, ಒಂಟಿತನ ಇವೆಲ್ಲವೂ ಕಾಡುತ್ತಿದ್ದರೂ ಆ ಹುಡುಗಿ ಧೈರ್ಯವಾಗಿ ಶಾಲೆಗೆ ಹೋಗಿ ಬಂದು ತಾಯಿಯ ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಳು. ಇದೀಗ ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿರುವ ತಾಯಿಯನ್ನು ಕಂಡು ಅವಳ ಮನಸ್ಸು ವಿಹ್ವಲಗೊಂಡಿತು. ಕಾಲೇಜಿನಿಂದ ಆಸ್ಪತ್ರೆಗೆ ಬಂದಾಗ, ತನ್ನ ತಂಗಿ ತಾಯಿಯನ್ನು ನೋಡಲು ಬಂದಿರುವುದು ಅಕ್ಕನಿಗೆ ತಿಳಿದು ಸಂತೋಷದ ಜೊತೆಗೆ ದುಃಖವೂ ಆಯಿತು. ವೈದ್ಯರು ತಾಯಿಯ ಬಗ್ಗೆ ತಿಳಿಸಿರುವ ಸಂಗತಿಯನ್ನು ತಂಗಿಗೆ ಹೇಳಲೇ ಬೇಕಿತ್ತು. ಇವಳಿಗೆ ಅವಳು, ಅವಳಿಗೆ ಇವಳು ಸದಾ ಸಾಂತ್ವನ ನೀಡಿ, ಪರಸ್ಪರರನ್ನು ಕಾಳಜಿವಹಿಸುತ್ತಿದ್ದರು. ಇಬ್ಬರೂ ಅಕ್ಕತಂಗಿಯರಂತಿರದೇ ಆತ್ಮೀಯ ಗೆಳತಿಯರಂತೆ ಅನ್ಯೋನ್ಯವಾಗಿದ್ದರು. ಹಾಗಾಗಿ ಏನೇ ಇದ್ದರೂ ಮುಚ್ಚು ಮರೆ ಇಲ್ಲದೇ ಪರಸ್ಪರ ಹಂಚಿಕೊಳ್ಳುತ್ತಿದ್ದರು. ಆದರೂ ಇಂತಹಾ ಖೇದಕರ ಸಂಗತಿಯನ್ನು ತಿಳಿಸಲು ಅಕ್ಕನಿಗೆ ಕಷ್ಟವಾಯಿತು…… ಇನ್ನು ನಮ್ಮ ತಾಯಿ ಬದುಕಿರುವುದು ಕೇವಲ ಆರು ತಿಂಗಳ ಮಾತ್ರ…. ಅಮ್ಮ ತುಂಬಾ ಗಂಭೀರ ಸ್ಥಿತಿಯಲ್ಲಿರುವಳು…. ಒಂದೊಂದು ದಿನ ಕಳೆಯುತ್ತಿದ್ದಂತೆ ಅವಳು ನಮ್ಮಿಂದ ದೂರವಾಗುತ್ತಿದ್ದಾಳೆ… ಎನ್ನುವ ಸತ್ಯವನ್ನು ನಾನು ಹೇಗೆ ತಂಗಿಗೆ ಹೇಳಲಿ? ಎಂಬ ಆಲೋಚನೆಯಲ್ಲಿ ಇದ್ದಳು. ಸುಮತಿಯ ಮೂರನೇ ಮಗಳು ತನ್ನ ತಾಯಿ ಮತ್ತು ಅಕ್ಕನ ಮುಖವನ್ನು ಸೂಕ್ಷ್ಮವಾಗಿ ಗಮನಿಸಿದಳು. ತಾಯಿಯ ಮುಖದಲ್ಲಿ ಭರವಸೆಯ ಛಾಯೆ ಇದ್ದರೆ, ಅಕ್ಕನ ಮುಖದಲ್ಲಿ ನಿರಾಶೆಯ ಛಾಯೆ ಮನೆ ಮಾಡಿತ್ತು. ಸದಾ ಹಸನ್ಮುಖಿಯಾದ ಅಕ್ಕ ಗಂಭೀರವಾದ ವಿಚಾರವಿಲ್ಲದೆ ಹೀಗೆ ಚಿಂತಾಕ್ರಾಂತಳಾಗಿ ಕಾಣಿಸಿಕೊಳ್ಳುವುದಿಲ್ಲ ಎನ್ನುವುದು ತಂಗಿಗೆ ತಿಳಿದಿತ್ತು. ಆದರೂ ತಾಯಿಯ ಎದುರು ಏನನ್ನೂ ಕೇಳುವುದು ಸೂಕ್ತವಲ್ಲ ಎಂದುಕೊಂಡು…. “ಅಮ್ಮಾ ….ಈಗ ಹೇಗಿದ್ದೀಯಾ?….ಮೊನ್ನೆ ನೀನು ಮನೆಯಿಂದ ಹೊರಟಾಗ ತುಂಬಾ ದಣಿದಿದ್ದೆ…. ಈಗ ನಿನ್ನ ಆಯಾಸ ಕಡಿಮೆಯಾಯಿತೇ? ಮನೆಯಲ್ಲಿ ನೀನು ಆಗಾಗ ವಾಂತಿ ಮಾಡಿಕೊಳ್ಳುತ್ತಿದ್ದೆ…. ಈಗ ಹೇಗಿದೆ?…. ಊಟ ಸೇರುತಿದೆಯೇ?…. ಎಂದು ತಾಯಿಯನ್ನು ಕೇಳಿದಳು. ಅದಕ್ಕೆ ಸುಮತಿ ಈಗ ಸ್ವಲ್ಪ ಪರವಾಗಿಲ್ಲ ಮಗಳೇ….. ವೈದ್ಯರ ಮೇಲ್ನೋಟದಲ್ಲಿ, ದಾದಿಯರ ಶುಶ್ರೂಷೆಯಲ್ಲಿ ಈಗ ಸ್ವಲ್ಪ ಚೇತರಿಸಿಕೊಂಡಿದ್ದೇನೆ…. ಜೊತೆಗೆ ನಿಮ್ಮಿಬ್ಬರ ಪ್ರೀತಿ ಮತ್ತು ಕಾಳಜಿ ನನಗೆ ಔಷಧವಲ್ಲವೇ? ….. ಅದಿರಲಿ ನೀನು ಹೇಗಿದ್ದೀಯಾ?….. ನಿನ್ನನ್ನು ಒಬ್ಬಳನ್ನೇ ಮನೆಯಲ್ಲಿ ಬಿಟ್ಟು ನಾನು ಇಲ್ಲಿ ಆಸ್ಪತ್ರೆಯಲ್ಲಿ ದಾಖಲಾಗುವ ಅನಿವಾರ್ಯ ಪರಿಸ್ಥಿತಿ ಬಂತು…. ನನಗೆ ತಿಳಿದಿರಲಿಲ್ಲ ಹೀಗೆ ಕೂಡಲೇ ನನ್ನನ್ನು ಆಸ್ಪತ್ರೆಯಲ್ಲಿ ದಾಖಲು ಮಾಡುತ್ತಾರೆ ಎಂಬುದು…. ವೈದ್ಯರು ಪರಿಶೀಲನೆ ನಡೆಸಿ ಮನೆಗೆ ಕಳುಹಿಸುತ್ತಾರೆ ಎಂದು ತಿಳಿದಿದ್ದೆ…. ಇಲ್ಲಿಗೆ ಬಂದ ಕೂಡಲೇ ನನ್ನನ್ನು ವೈದ್ಯರು ಹಲವಾರು ಪರೀಕ್ಷೆಗಳಿಗೆ ಒಳಪಡಿಸಿ, ಇಲ್ಲಿ ದಾಖಲಾಗುವಂತೆ ತಿಳಿಸಿದರು…. ನಿನ್ನ ಅಕ್ಕ ಕೂಡ ಕೂಡಲೇ ನನ್ನನ್ನು ಇಲ್ಲಿಗೆ ದಾಖಲಿಸಿದಳು”….. ಎಂದಾಗ,…. “….ಅಮ್ಮಾ ….ಅಕ್ಕ ಆ ದಿನವೇ ನನಗೆ ಈ ಎಲ್ಲಾ ವಿಷಯವನ್ನು ತಿಳಿಸಿದ್ದಾಳೆ…. ನೀನು ಹೆಚ್ಚು ಯೋಚಿಸಿ ಆಯಾಸ ಪಡಬೇಡ…. ನಾನು ಅಲ್ಲಿ ಚೆನ್ನಾಗಿದ್ದೇನೆ…. ಅಲ್ಲಿ ಸುತ್ತಲೂ ನಮಗೆ ಪರಿಚಿತರಲ್ಲವೇ ಇರುವುದು? ಹಾಗಾಗಿ ಯಾವುದೇ ತೊಂದರೆ ಇಲ್ಲ…. ದಿನವೂ ನಾನು ಶಾಲೆಗೆ ಹೋಗಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಬರುತ್ತಿದ್ದೇನೆ…. ನೀನು ಯಾವುದರ ಬಗ್ಗೆಯೂ ಹೆಚ್ಚು ತಲೆಕೆಡಿಸಿಕೊಳ್ಳಬೇಡ…. ನಿನ್ನ ಜೊತೆ ಸದಾ ನಾನು ಮತ್ತು ಅಕ್ಕ ಇದ್ದೇವೆ…. ಎಂದಳು. ಮಗಳ ಮಾತನ್ನು ಕೇಳಿದ ಸುಮತಿ ಎದ್ದು ಕುಳಿತು, ಇಬ್ಬರನ್ನೂ ತನ್ನ ಅಕ್ಕಪಕ್ಕದಲ್ಲಿ ಬಂದು ಕುಳಿತುಕೊಳ್ಳುವಂತೆ ಸೂಚಿಸಿದಳು.ತಾಯಿಯ ಅಣತಿಯಂತೆ ಇಬ್ಬರೂ ಅಕ್ಕಪಕ್ಕ ಬಂದು ಕುಳಿತರು. ಸುಮತಿ ಮಕ್ಕಳಿರಿಬ್ಬರನ್ನೂ ತೋಳಿಂದ ಬಳಸಿ …. ಮಕ್ಕಳೇ ಈ ಅಮ್ಮನನ್ನು ಕ್ಷಮಿಸಿ…. ಈ ವಯಸ್ಸಿಗೇ ನಿಮ್ಮನ್ನು ಹಲವಾರು ಕಷ್ಟಗಳಿಗೆ ದೂಡಿದೆ.‌ ನನ್ನಿಂದ ನಿನ್ನ ವಿಧ್ಯಾಭ್ಯಾಸ ಕೂಡಾ ಮೊಟಕುಗೊಂಡಿತು…..ಎನ್ನುತ್ತಾ ಮೂರನೇ ಮಗಳ ಭುಜವನ್ನು ಹಿಡಿದು ತನ್ನಡೆಗೆ ಆನಿಸಿಕೊಂಡು ಸುಮತಿ ಹೇಳಿದಳು….. “ಅಮ್ಮಾ …..ಅದಕ್ಕಾಗಿ ನೀನೇನೂ ಬೇಸರಗೊಳ್ಳಬೇಡ…. ಎಸ್ ಎಸ್ ಎಲ್ ಸಿ ವರೆಗೂ ಓದಿದ್ದೇನೆ…. ಅಕ್ಕ ಈಗ ಪದವಿ ತರಗತಿಯಲ್ಲಿ ಓದುತ್ತಿದ್ದಾಳೆ…. ತಂಗಿ ನವೋದಯ ಶಾಲೆಯಲ್ಲಿ ಓದುತ್ತಿದ್ದಾಳೆ…. ನಾವು ವಿದ್ಯೆಯನ್ನು ಕರೆಯಲಿ ಎಂದು ನೀನು ಮಾಡಿದ ತ್ಯಾಗ ಅಷ್ಟಿಷ್ಟಲ್ಲ”…. ಎಂದು ಹೇಳುತ್ತಾ, ನೀನೇಕೆ ಹೀಗೆ ಮಂಕಾಗಿರುವೆ ಎಂಬಂತೆ ಪ್ರಶ್ನಾರ್ಥಕವಾಗಿಅಕ್ಕನನ್ನು ನೋಡಿದಳು. ಅವಳ ಮುಖವು ಮ್ಲಾನವಾಗಿತ್ತು. ಕಣ್ಣುಗಳಲ್ಲಿ ಕಂಡೂ ಕಾಣದಂತೆ ಕಣ್ಣೀರಿನ ಪಸೆಯಿತ್ತು. ರುಕ್ಮಿಣಿ ನಾಯರ್

Read Post »

ligade
ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-22 ಸವಿತಾ ದೇಶಮುಖ ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ಜನ ಸೇವೆಯೇ ಜೀವನದ ಧ್ಯೇಯವಾಗಿದ್ದ ಜಯದೇವಿ ತಾಯವರ ಜೀವನವು ತ್ಯಾಗ, ಸೇವೆ ಮತ್ತು ಮಾತೃತ್ವದ ಅದ್ಭುತ ಸಂಗಮ.ಅವರು ತಮ್ಮ ವೈಯಕ್ತಿಕ ಸುಖದುಃಖಗಳನ್ನು ಮರೆತು ಸಮಾಜದ ಒಳಿತಿಗಾಗಿ ಸದಾ ಶ್ರಮಿಸುತ್ತಿದ್ದರು. ಕುಟುಂಬದ ಜವಾಬ್ದಾರಿ ಹೊತ್ತು ಮಕ್ಕಳನ್ನು ಪ್ರೀತಿಯಿಂದ ಸಾಕಿ ಸಲಹುತ್ತಾ….. ಬಡವರು, ನಿರ್ಗತಿಕರು ಹಾಗೂ ಸಹಾಯದ ನಿರೀಕ್ಷೆಯಲ್ಲಿದ್ದ ಜನರಿಗೆ ಆಶಾಕಿರಣವಾಗಿದ್ದರು. ಪತಿಯ ವಿಯೋಗದ ನಂತರ ಜೀವನದ ಭಾರ ಇನ್ನಷ್ಟು ಹೆಚ್ಚಾದರೂ ಅವರು ಎಂದಿಗೂ ಕುಗ್ಗಲಿಲ್ಲ…ಐದು ಮಕ್ಕಳನ್ನು ಬೆಳೆಸಿ ಅವರಿಗೆ ಉತ್ತಮ ಸಂಸ್ಕಾರ, ಶಿಕ್ಷಣ ಮತ್ತು ಜೀವನ ಮೌಲ್ಯಗಳನ್ನು ಕಲಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದರು. ಮಕ್ಕಳ  ಮನಸ್ಸುಗಳಲಿ ಪ್ರೀತಿ, ಕರುಣೆ ಮತ್ತು ಮಾನವೀಯತೆಯತೆ ತುಂಬಿಸಿದರು. ತಾಯಿಯವರ ಮನೆ ಎಂದರೆ…. ನೆರವು ಕೇಳಿ ಬರುವವರಿಗೆ ಸದಾ ತೆರೆದ ಬಾಗಿಲಾಗಿತ್ತು. ಹಸಿದವರಿಗೆ ಅನ್ನ, ಸಂಕಷ್ಟದಲ್ಲಿರುವವರಿಗೆ ಧೈರ್ಯ, ನಿರಾಶೆಯಲ್ಲಿರುವವರಿಗೆ ಆಶ್ವಾಸನೆ ನೀಡುವುದು ಅವರ ಸಹಜ ಗುಣವಾಗಿತ್ತು. ಊರಿನಲ್ಲಿ ಯಾರಿಗಾದರೂ ಕಷ್ಟ ಬಂದರೆ ಮೊದಲು ನೆನಪಾಗುತ್ತಿದ್ದ ಹೆಸರು ಜಯದೇವಿ ತಾಯಿಯವರದ್ದೇ.ತಮ್ಮ ಮಕ್ಕಳಿಗೆ  ತಮ್ಮ ಜೀವನದ ಮೂಲಕವೇ ಪಾಠ ಕಲಿಸಿದರು. “ಮನುಷ್ಯನ ಬದುಕಿನ ನಿಜವಾದ ಅರ್ಥ ಇನ್ನೊಬ್ಬರ ಕಣ್ಣೀರು ಒರೆಸುವುದರಲ್ಲಿ ಇದೆ” ಎಂಬ ಸಂದೇಶವನ್ನು ತಮ್ಮ ನಡೆನುಡಿಗಳ ಮೂಲಕ ತೋರಿಸಿದರು. ಮಕ್ಕಳಲ್ಲು ಕೂಡ ಸೇವಾಭಾವವನ್ನು ಜೀವನದ ಮೌಲ್ಯವಾಗಿ ಅಳವಡಿಸಿದರು. ಅವರ ಜೀವನ  ಶಕ್ತಿಯ, ಸಹನೆಯ ಮತ್ತು ನಿಸ್ವಾರ್ಥ ಪ್ರೀತಿಯ ಮಹಾಕಾವ್ಯ. ತಮ್ಮ ಜೀವನದ ಪ್ರತಿಯೊಂದು ಕ್ಷಣವನ್ನು ಕುಟುಂಬ ಮತ್ತು ಸಮಾಜದ ಒಳಿತಿಗಾಗಿ ಅರ್ಪಿಸಿದ ಅವರು ನಿಜಕ್ಕೂ “ತಾಯಿ” ಎಂಬ ಪದಕ್ಕೆ ಅರ್ಥ ತುಂಬಿದ ಮಹನೀಯರು. *ಬೇಡಿಲ್ಲ ಫಲ ಪದವಿ |ಬೇಡಿಲ್ಲ ಸ್ಥಾನಮಾನಬೇಡಿಲ್ಲ ಮಂತ್ರಿ ತಂತ್ರಿಯಾಗಲು -ಜಯದೇವಿತಾಯಿ ಆದಳು ಕನ್ನಡದ* || ಎನ್ನುವಂತೆ ಕನ್ನಡದ ತಾಯಿಯಾಗಿ ನಿಸ್ಸಹಾಯಕರ ಬಂಧುವಾಗಿ,ತಮ್ಮ ಮಕ್ಕಳಿಗೆ ನೆರಳಾಗಿ ನಿಂತ ತಾಯಿ, ಸಮಾಜದ ನೋವಿಗೆ ಮದ್ದಾಗಿ ಬದುಕಿದ ತಾಯಿ!!!!,  ಇನ್ನೂ ಜಯದೇವಿ ತಾಯಿಯವರ ಮೂರನೇ ಮಗ *ಬಸವರಾಜ* ಚಿಕ್ಕಂದಿನಿಂದಲೇ ಎಲ್ಲರಲ್ಲೂ ವಿಭಿನ್ನವಾಗಿದ್ದರು. ಮನೆಯಲ್ಲಿದ್ದ ಇತರ ಮಕ್ಕಳಂತಲ್ಲ…..ಮಗುವಾಗಿದ್ದಾಗ ಶಾಂತವಾಗಿ ಮಲಗಿರುತ್ತಿದ್ದರು ಹಸಿವೆ ಆದಾಗ ಮಾತ್ರ ಅಳುತ್ತಿದ್ದರು ಹೀಗಾಗಿ ತಾಯಿಯವರಿಗೆ ಹೆಚ್ಚಾಗಿ ಮಗನ ಕಾಳಜಿ ಮಾಡದು ಬೇಕಾಗಿ ಬರಲಿಲ್ಲ ಅಂತ ಹೇಳುತಿದ್ದರು. ಡಾ. ಬಸವರಾಜ್ ಲಿಗಾಡಿ ಮಧ್ಯದಲ್ಲಿ ಲಲ್ಲೇಶ್ವರಿ ತಾಯಿ, ಬಸವರಾಜರ ಧರ್ಮಪತ್ನಿ ಡಾ. ಮಧುಮಾಲ ಇತರರಂತೆ ಗಲಾಟೆ, ಹಠ, ಆಟ-ಪಾಟಗಳಲ್ಲಿ ಮುಳುಗದೆ ಶಾಂತವಾಗಿದ್ದರು. ಅವರ ಕಣ್ಣುಗಳಲ್ಲಿ ಒಂದು ವಿಚಿತ್ರ ಶಾಂತಿ ಇತ್ತು. ಮುಖದಲ್ಲಿ ಸದಾ ಮೃದುವಾದ ನಗು. ತಾಯಿಯವರು ಎಷ್ಟೇ ದುಃಖದಲ್ಲಿದ್ದರೂ ಬಸವರಾಜನ ಆ ಶಾಂತ ವದನವನ್ನು ನೋಡಿದ ಕ್ಷಣ ಮನಸ್ಸಿಗೆ ಒಂದು ನೆಮ್ಮದಿಗೆ ಇಳಿಯುತ್ತಿದ್ದರು. ಮನೆಯಲ್ಲಿ ಯಾರಿಗಾದರೂ ನೋವಾದರೆ ಮೊದಲಿಗೆ ಓಡಿ ಹೋಗಿ “ಏನಾಯ್ತು?” ಎಂದು ಕೇಳುವ ಕರುಣೆ ಅವರೋಳಗೆ ಬೆಳೆದಿತ್ತು.  ಚಿಕ್ಕವರಿದ್ದಾಗಲೇ “ನಾನು ದೊಡ್ಡವನಾದ ಮೇಲೆ ಡಾಕ್ಟರ್ ಆಗಬೇಕು… ನೋವಿನಲ್ಲಿರುವ ಮಕ್ಕಳನ್ನು ಉಳಿಸಬೇಕು…” ಎಂದು ತಾಯಿಯವರ ಬಳಿ ಹೇಳುತ್ತಿದ್ದ. ಅವರ ಆಟಿಕೆಯ ಸಾಮಾನುಗಳೆಂದರೆ ಇಂಜೆಕ್ಷನ್ ತೆತಸ್ಕೋಪ್ಗಳೇ ಆಗಿದ್ದವು ಅಂತ ತಾಯಿಯವರು ಹೇಳುತ್ತಿದ್ದರು.ನಾವು ಬಯಸಿದ್ದನ್ನೇ ಮುಂದೆ ಆಗುತ್ತೇವೆ ಅನ್ನುವದು‌ ಬಲು ಸತ್ಯ ಎನ್ನುವರು!!…..ಸಕಾರಾತ್ಮಕವಾಗಿ ಅಥವಾ ನಕಾರಾತ್ಮಕತೆಯಿಂದಾಗಲಿ ನಾವು ಏನನ್ನು ಬಯಸುತ್ತೇವೋ ಜೀವನದಲ್ಲಿ ಅದೇ ಆಗುವದು ಅನ್ನುವ ಸ್ಥಿತಿ ಗತಿಗಳ ‌ಬಗ್ಗೆ ಹೇಳುಲು.. ಈ ಉದಾಹರಣೆಯನ್ನು ಹೇಳುತ್ತಿದ್ದರು. ಬಸವರಾಜರು ಬೆಳೆದಂತೆ , ವೈದ್ಯಕೀಯ ಶಿಕ್ಷಣಕ್ಕೆ ಸೇರಿದರು..ಆ ದಿನ ತಾಯಿಯವರು ಸಂತೋಷದಿಂದ  “ನನ್ನ ಮಗ ಇನ್ನು ಜೀವ ಉಳಿಸುವ ದೇವರ ಕೈ ಆಗ್ತಾನೆ” ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದರು. ಡಾ. ಬಸವರಾಜರ ಇನ್ನೋರ್ವ ಪತ್ನಿ ಮಧ್ಯದಲ್ಲಿ ಶೈಲಜಾ  ಮುಂದೆ ಬಸವರಾಜ ಮಕ್ಕಳು ಆಗದವರಿಗೆ ಉಪಚಾರವನ್ನು ಮಾಡಲಾರಂಭಿಸಿದರು. ಬಂಜೆತನ ನಿವಾರಣೆ ತಜ್ಞರಾದರು. *ನುಡಿಗಳ ಸ್ಮರಿಸುವೆ| ನಡೆಯಲಿ ಅಳವಡಿಸಿ ಎಡವಿದರೆ ಕೈಹಿಡಿದೆತ್ತು – ಹಡೆದವ್ವದಡೆಗೆ ಕರೆದೊಯ್ಯೇ ಮಗುವಿಗೆ*||ಎನ್ನುವ  ಮನೋಭಾವವನ್ನು ಬಸವರಾಜರು ಹೊಂದಿದ್ದರುಅಂತೇಯೇ ಜಯದೇವಿ ತಾಯಿಯವರ ವೃದ್ಧಾಪ್ಯದಲ್ಲಿ ಬಸವರಾಜರು ನೆರಳಾಗಿ ನಿಂತರು. ತಾಯಿಯವರಿಗೆ ನೋವಾಗದಂತೆ ಪ್ರತಿಯೊಂದು ಹೆಜ್ಜೆಯಲ್ಲೂ ಕಾಳಜಿ ವಹಿಸಿದರು. ರಾತ್ರಿ ಎಷ್ಟೇ ಕೆಲಸ ಇದ್ದರೂ ತಾಯಿಯ ಕೋಣೆಗೆ ಹೋಗಿ “ಅಮ್ಮ ಆರೋಗ್ಯ ಹೇಗಿದೆ?” ಎಂದು ಕೇಳದೇ ನಿದ್ರೆ ಮಾಡುತ್ತಿರಲಿಲ್ಲ. *ಹೊತ್ತು ಇಳಿಯುತಿದ್ದಂತೆ |ಗೊತ್ತು ಗುರಿಕಾಣು ಮತ್ತೆ ಹುಟ್ಟಿ ಬರದು- ಜನುಮಹೆತ್ತವ್ವನ ಬಿಡದೆ ಜಪಿಸು* ||ಎನ್ನುವಂತೆ ತಾಯಿಯವರ ಕೊನೆಯ ದಿನಗಳಲ್ಲಿಯೂ ಬಸವರಾಜ ಅವರ ಕೈ ಹಿಡಿದುಕೊಂಡೇ ಇದ್ದರು. ಮಗನ ಆ ಮಮತೆಯ ಸ್ಪರ್ಶದಲ್ಲಿ ಜಯದೇವಿ ತಾಯಿಯವರು ತಮ್ಮ ಜೀವನದ ಎಲ್ಲಾ ಹೋರಾಟಗಳಿಗೂ ಅರ್ಥ ಸಿಕ್ಕಂತಾಗಿತ್ತು. *ತಾಯಿಯೇ ದೇವರು| ತಾಯಿಯೇ ಗುರಿತಾಯಿ ಕಲಸಿದರು ನಡೆ ನುಡಿ -ಚೆನ್ನಆಯಿತು ಅದು ಮುಕ್ತಿಯ ಧಾಮ *|| ಎನ್ನುವಂತೆ ಬದುಕಿದವರು ಲಲ್ಲೇಶ್ವರಿ ತಾಯಿಯವರು (ನನ್ನ ತಾಯಿ) ತಾಯಿಯವರ ನೆರಳಲಿ ಬದುಕಿದ ಬಾಳಿದ ಮಗಳ ಮಹಾ ಸೇವೆಯ ಬಗ್ಗೆ ಜಯದೇವಿ ತಾಯಿಯವರು ಎಲ್ಲರೆದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ಅವರ ಉಸಿರಾಗಿ, ಅವರ ಹೆಜ್ಜೆಯ ಮೇಲೆ ಹೆಜ್ಜೆ ಹಾಕುತ್ತ ಬದುಕಿದವರು ಕೊನೆಯ ಮಗಳು ಲಲ್ಲೇಶ್ವರಿ ತಾಯಿ. ತಾಯಿಯಲ್ಲಿಯೇ ತಮ್ಮ ಲೋಕವನ್ನು ಕಂಡವರು. *ಅಂದಾಜು ಮೃದ ನುಡಿ |ಚಂದಾದ ಮುಖಮಂದಿರ ಮಂದಮತಿಗೆ -ಲಭಿಸಿ ಸೇವೆಮಾತಾಯಿ ಎಂದೆಂದೂ ಬಿಡೇನು ಪಾದ*|| ಎನ್ನುತ ಲಲ್ಲೇಶ್ವರಿಯವರಿಗೆ ತಾಯಿಯ ಒಂದು ಕಣ್ಣೋಟ ಸಾಕು, ಅವರ ಮನದ ಮಾತನ್ನು ಅರಿಯುತ್ತಿದ್ದರು.  ಏನನ್ನೂ ಕೇಳುವ ಮುನ್ನವೇ ಅವರ ಅವಶ್ಯಕತೆಗಳನ್ನು ಪೂರೈಸುತ್ತಿದ್ದರು. ತಾಯಿಯವರ ನಗು ಅವರ ಸಂತೋಷವಾಗಿತ್ತು; ಅವರ ನೋವು ಅವರ ಹೃದಯದ ನೋವಾಗಿತ್ತು. ಹಗಲು ರಾತ್ರಿ ಎನ್ನದೆ, ಸುಖ ದುಃಖ ಎನ್ನದೆ, ತಮ್ಮ ಬದುಕನ್ನೇ ತಾಯಿಯ ಸೇವೆಗೆ ಅರ್ಪಿಸಿಕೊಂಡಿದ್ದರು. *ತನು ಮನದ ಸೇವೆ| ಉಸಿರಿರುವ ತನಕಬೇಸರವಿಲ್ಲ ಕಿಂಚಿತ್ತ -ಹಡೆದವ್ವಉಸಿರು ಹಾಕಲಾರೆ ಕಡೆ ತನಕ* || ಎನ್ನುತ್ತಿದ್ದರು ನನ್ನ  ತಾಯಿ ಲಲ್ಲೇಶ್ವರಿಯವರುತಾಯಿಯವರು. ಪ್ರತಿ ಘಳಿಗೆಯಲ್ಲೂ ಅವರ ಕೈ ಹಿಡಿದು ನಡೆಸುತ್ತಿದ್ದರು. ತಾಯಿಯವರು ಆಯಾಸಗೊಂಡಾಗ ತಮ್ಮ ಮಡಿಲನ್ನೇ ಆಸರೆಯನ್ನಾಗಿ ಮಾಡುತ್ತಿದ್ದರು. ತಾಯಿಯವರ ಆರೋಗ್ಯದಲ್ಲಿ ಏರಿಳಿತಗಳು ಬಂದಾಗ, ಅವರ ಕಣ್ಣಲ್ಲಿ ನಿದ್ರೆ ಇರುತ್ತಿರಲಿಲ್ಲ… ಒಂದೇ ಸಮನೆ ದೇವರಲ್ಲಿ ತಾಯಿಗೆ ನೋವು ಕೊಡಬೇಡವೆಂದು  ಬೇಡಿಕೊಳ್ಳುತ್ತಿದ್ದರು. *ಅರೆ ನಿಮಿಷ ಬಿಟ್ಟಿಲ್ಲ |ನೆರಳಾಗಿ ಬೆಳೆದೆವುಬೇರೆ ಸ್ವತಂತ್ರ ಪಡೆದಿಲ್ಲ -ತಾಯಿಯಹರಣ ಒಂದು ದೇಹವೆರಡು*|| ಎನ್ನುವಂತೆ ಲಲ್ಲೇಶ್ವರಿಯವರು ತಾಯಿ ಇಲ್ಲದೆ ಒಂದು ಕ್ಷಣವೂ ಬದುಕಿರಲಾರಿ ಅನ್ನುವ ಸ್ಥಿತಿಯಲ್ಲಿ ಅವರು ಬದುಕುತ್ತಿದ್ದರು.ತಾಯಿಯವರ ಕೊನೆಯ ದಿನಗಳಲ್ಲಿ ಲಲ್ಲೇಶ್ವರಿ ತಾಯಿಯವರ ಸೇವೆ ಇನ್ನಷ್ಟು ಅಪೂರ್ವವಾಯಿತು. ಅವರು ಮಗಳಾಗಿ , ತಾಯಿಗೆ ತಾಯಿಯಾಗಿ ಮಗುವನ್ನು ನೋಡಿಕೊಳ್ಳುವಂತೆ ಮಮತೆಯಿಂದ ಜಯದೇವಿ ತಾಯಿಯವರನ್ನು ನೋಡಿಕೊಂಡರು. ಔಷಧಿ ನೀಡುವುದರಿಂದ ಹಿಡಿದು, ಊಟ ಮಾಡಿಸುವವರೆಗೂ, ರಾತ್ರಿ ನಿದ್ರೆಯಲ್ಲೂ ಎಚ್ಚರವಿದ್ದು ಅವರ ಆರೋಗ್ಯವನ್ನು ಗಮನಿಸುತ್ತಿದ್ದರು. *ಅಹೋರಾತ್ರಿ ನೆನೆದೆ| ಮಹಾತಾಯಿ ಸೇವೆಇಹಪರವ ಗೆಲಿದೆ ಕಟಾಕ್ಷ -ಸೇವೆಯಲಿಗೆಲಿದೆ ಜನನ ಮರಣವನು* ||ಎನ್ನುತ್ತಿದ್ದರು ಲಲ್ಲೇಶ್ವರಿಯವರು. ಇಲ್ಲಿ ಜಯದೇವಿ ತಾಯಿಯವರು ಒಂದು ಘಟನೆಯನ್ನು ಯಾವಾಗಲೂ ನೆನಪಿಸುತ್ತಿದ್ದರು . ಆಗ ಲಲ್ಲೇಶ್ವರಿ ಅವರಿಗೆ ಕೇವಲ ಮೂರು ಅಥವಾ ನಾಲ್ಕು ವರ್ಷಗಳಿರಬಹುದು…..ಜಯದೇವಿ ತಾಯಿಯವರ ಆರೋಗ್ಯ ಹುಷಾರಿಲ್ಲದೆ ಹಾಸ್ಪಿಟಲ್ ನಲ್ಲಿ ಅಡ್ಮಿಟ್ ಆದ  ದಿನಗಳಲ್ಲಿ ನಡೆದ ಈ ಘಟನೆ ಕೇಳಿದರೆ ಹೃದಯವೂ ಕರಗುತ್ತದೆ.ಆಸ್ಪತ್ರೆಯ ಹಾಸಿಗೆಯ ಮೇಲೆ ಜಯದೇವಿ ತಾಯಿಯವರು ಅಸಹನೀಯ ನೋವಿನಿಂದ ನರಳುತ್ತಿದ್ದರು. ದೇಹದ ಯಾತನೆ ಹೆಚ್ಚಾದಾಗ  ಆ ಕ್ಷಣದಲ್ಲಿ  ತಮ್ಮನ್ನು ತಾವು ಮರೆತು, ಪುಟ್ಟ ಮಗುವಿನಂತೆ,“ಅವ್ವಾ… ಅವ್ವಾ…”ಎಂದು ತಮ್ಮ ಜನ್ಮದಾತೆಯನ್ನು ಕರೆಯುತ್ತಿದ್ದರು. ಆ ಕರೆಯಲ್ಲಿ ನೋವಿತ್ತು, ಹಂಬಲವಿತ್ತು, ತಾಯಿಯ ಮಡಿಲಿಗಾಗಿ ಹಾತೊರೆಯುವ ಮಗುವಿನ ಹೃದಯವಿತ್ತು. ಆ ದೃಶ್ಯವನ್ನು ಕಂಡ ಲಲ್ಲೇಶ್ವರಿಯವರ ಹೃದಯ ಕರಗಿತು. ಆ ಕ್ಷಣದಲ್ಲಿ  ತಾಯಿಯಾಗಿ ನಿಂತರು..ತನ್ನ ತಾಯಿಯ ಕಣ್ಣೀರನ್ನು ಒರೆಸುತ್ತಾ, ತಲೆಯನ್ನು ಮೃದುವಾಗಿ ಸವರುತ್ತಾ, ಮೂರು ವರ್ಷದ ಮಗುವೊಂದು ತನ್ನ ತಾಯಿಯನ್ನು ಸಮಾಧಾನಪಡಿಸಲು ಮುಗ್ಧತೆಯಿಂದ,“ಅವ್ವಾ, ಅಳಬೇಡ. ನಿನ್ನ ತಾಯಿ ಬರುವವರೆಗೂ ನಾನೇ ನಿನ್ನ ತಾಯಿಯಾಗಿರುತ್ತೇನೆ. ಏನು ಬೇಕಾದರೂ ನನಗೆ ಹೇಳು…”ಎಂದು ಹೇಳಿದರು.ಆ ಮಾತು ಕೇಳಿದಾಗ ಅಲ್ಲಿ ಇದ್ದವರ ಕಣ್ಣುಗಳಲ್ಲೂ ನೀರು ತುಂಬಿತು…. ಸಂಬಂಧಗಳೆಲ್ಲ ತಲೆಕೆಳಗಾಗಿದ್ದವು. ತಾಯಿ ಮಗುವಾಗಿದ್ದರು,ಮಗಳು ತಾಯಿಯಾಗಿದ್ದರು.ಲಲ್ಲೇಶ್ವರಿ ತಾಯಿಯವರು ತಮ್ಮ ಕೈಯಿಂದ ನೀರು ಕುಡಿಸಿದರು. ನೋವಿನಿಂದ ನಲುಗಿದ್ದ ತಾಯಿಯ ಬೆವರನ್ನು ಒರೆಸಿದ್ದರು. ಅಂದಿನ‌ದಿನದಿಂದ ಕೊನೆಯ ದಿನ ವರೆಗೂ ತಾಯಿಯಾಗಿಯೇ ಅವರು ಜಯದೇವಿ ತಾಯಿಯವರಿಗೆ ಆಸರೆಯಾದರು.ಅವರ ಪ್ರತಿಯೊಂದು ಸ್ಪರ್ಶದಲ್ಲೂ ಮಮತೆಯಿರುತಿತ್ತು.ಪ್ರತಿಯೊಂದು ಮಾತಿನಲ್ಲೂ ಧೈರ್ಯವಿತ್ತು,  ಸೇವೆಯಲ್ಲೂ ಭಕ್ತಿಯಿತ್ತು.ಒಂದು ಸಮಯದಲಿ ಜಯದೇವಿ ತಾಯಿಯವರು ಲಲ್ಲೇಶ್ವರಿಯನ್ನು ಮಡಿಲಲ್ಲಿ ಹೊತ್ತು ಬೆಳೆಸಿದ್ದರು. ಈಗ ಕಾಲಚಕ್ರ ತಿರುಗಿ, ಲಲ್ಲೇಶ್ವರಿಯವರೇ ಜಯದೇವಿ ತಾಯಿಯವರನ್ನು ಮಮತೆಯ ಮಡಿಲಲ್ಲಿ ಹೊತ್ತುಕೊಂಡಿದ್ದರು. *ತನು ಸವಿಸಿ ಸೇವೆಯಲ್ಲಿ| ಮನನಿಲಿಸಿ ಧ್ಯಾನದಿ ತನುಮನ ಒಂದಾಗಿ ದುಡಿಸಿದೆ -ನನ್ನವ್ವನಾನೆಂಬುದು ಅಳಿದು ನೀನಾದೆ*|| ತಾಯಿಯ ನೋವನ್ನು ತಮ್ಮ ನೋವನ್ನಾಗಿ, ತಾಯಿಯ ಕಣ್ಣೀರನ್ನು ತಮ್ಮ ಕಣ್ಣೀರನ್ನಾಗಿ, ಪ್ರತಿ ಉಸಿರಿನ  ಪ್ರಾರ್ಥನೆಯಾದರು. *ಕಡೆತನ ಭಂಗ |ಬರದೇ ಅಡಿಗಡಿಗೆ ಎಚ್ಚರಬಿಡದಂತೆ ತವ ಸೇವೆ -ನನ್ನವ್ವಮೂಡಿಗೆ ಧರಿಸಿರಿ ತವ ಪಾದ*|| ಜನ್ಮ ನೀಡಿದ ತಾಯಿಗೆ ಮರಳಿ ತಾಯಿಯಾಗುವ ಭಾಗ್ಯ ಕೆಲವೇ ಆತ್ಮಗಳಿಗೆ ಸಿಗುತ್ತದೆ.  ಅಪರೂಪದ ಭಾಗ್ಯವನ್ನು ಲಲ್ಲೇಶ್ವರಿ ತಾಯಿಯವರು ತಮ್ಮ ಪ್ರೀತಿ, ಸೇವೆ ಮತ್ತು ತ್ಯಾಗದ ಮೂಲಕ ಸಾರ್ಥಕಗೊಳಿಸಿದರು. ಜಯದೇವಿ ತಾಯಿಯವರ ಕೊನೆಯ ದಿನಗಳಲ್ಲಿ ಮಮತೆಯ ಮೂರ್ತಿ, ಸೇವೆಯ ಮಗಳಾಗಿ,  ತಾಯಿಯ ಬದುಕಿನ  ಆಶ್ರಯವಾಗಿದ್ದರು. ಅವರ ಜೀವನವನ್ನು ನೋಡಿದಾಗ, “ಮಗಳು ಎಂದರೆ ಕೇವಲ ಜನ್ಮ ನೀಡಿದ ಸಂತಾನವಲ್ಲ….ತಾಯಿಯ ಹೃದಯದ ತುಂಡು” ಎಂಬ ಮಾತು ನೆನಪಾಗುತ್ತದೆ.ತಾಯಿಯವರ ಜೀವನದ ಕೊನೆಯ ಕ್ಷಣಗಳಲ್ಲೂ ಲಲ್ಲೇಶ್ವರಿ ತಾಯಿಯವರ ಕಾಳಜಿ ಮತ್ತು ಸೇವೆ ಗಂಗೆಯಂತೆ ನಿರಂತರವಾಗಿ ಹರಿಯುತ್ತಿತ್ತು… ಅಪಾರ ಪ್ರೀತಿ, ಭಕ್ತಿ ಮತ್ತು ಕೃತಜ್ಞತೆಯಿಂದ ಮೂಡಿದ ಅಮೃತಧಾರೆ.*ನೀನಿಲ್ಲದ ತಾಣ |ಇಲ್ಲ ಇನ್ನೆಲ್ಲಿನೀನೆ ತುಳುಕಿರುವೆ ಒಳ ಹೊರಗೆ -ತಾಯವ್ವನಾನು ನೀನು ಬೆರೆತು ಒಂದಾಗಿ*|| ಎನ್ನುವಂತೆ ಜಯದೇವಿ ತಾಯಿಯವರು  ಮತ್ತು ಲಲ್ಲೇಶ್ವರಿ ತಾಯಿಯವರ ನಡುವಿನ ಬಾಂಧವ್ಯ ಸಾಮಾನ್ಯ ತಾಯಿಮಗಳ ಸಂಬಂಧವಾಗಿರಲಿಲ್ಲ. ಅದು ಎರಡು ದೇಹಗಳಲ್ಲಿ ನೆಲೆಸಿದ್ದ ಒಂದೇ ಆತ್ಮದ ಪ್ರೀತಿಯಾಗಿತ್ತು. ಕೊನೆಯ ದಿನಗಳಲ್ಲಿ ಜಯದೇವಿ ತಾಯಿಯವರ ಆರೋಗ್ಯ ಹದಗೆಟ್ಟ ದಿನಗಳಲ್ಲಿ ವೈದ್ಯರು, ಸಿಬ್ಬಂದಿ ಮತ್ತು ಅವರ ಹತ್ತಿರದವರು ಒಂದು ವಿಷಯವನ್ನು ಗಮನಿಸಿದ್ದರು. ಲಲ್ಲೇಶ್ವರಿ ತಾಯಿಯವರ ಜೀವನವೇ ಜಯದೇವಿ ತಾಯಿಯವರ ಸುತ್ತ ಸುತ್ತುತ್ತಿತ್ತು. .ಆ ಕಾರಣದಿಂದಲೇ ತಾಯಿಯವರ ಸ್ಥಿತಿಯನ್ನು ಕಂಡ ವೈದ್ಯರು ಕೂಡ ಒಂದು ತುರ್ತು ಸಭೆ ಕರೆದು“ತಾಯಿಯವರ ಬಗ್ಗೆ ನಮ್ಮ ಕಾಳಜಿ ಎಷ್ಟಿದೆಯೋ, ಅಷ್ಟೇ ಕಾಳಜಿ ಲಲ್ಲೇಶ್ವರಿ ತಾಯಿಯವರ ಬಗ್ಗೆಯೂ ಇದೆ. ಇವರಿಬ್ಬರ ಪ್ರೀತಿ ಎಷ್ಟು ಆಳವಾಗಿದೆ ಎಂದರೆ, ತಾಯಿಯವರ ಅಗಲಿಕೆಯ ಆಘಾತವನ್ನು ಅವರು ಹೇಗೆ ತಡೆದುಕೊಳ್ಳುತ್ತಾರೆ ಎಂಬ ಚಿಂತೆ ನಮಗಿದೆ. ಅವರನ್ನು ಸ್ವಲ್ಪವಾದರೂ ಮಾನಸಿಕವಾಗಿ ಸಿದ್ಧಗೊಳಿಸಬೇಕು…”ಎಂದು ಮಾತನಾಡಿದ್ದರೆಂದು ಕೇಳಿದಾಗ ಅನೇಕರಿಗೆ ಆಶ್ಚರ್ಯವಾಗುತ್ತಿತ್ತು.ಅದು ಸಾಮಾನ್ಯ ಪ್ರೀತಿಯಲ್ಲ…ಅದು ಉಸಿರಿಗೂ ಉಸಿರಿನ ಸಂಬಂಧವಾಗಿತ್ತು.ಜಯದೇವಿ ತಾಯಿಯವರು ಕೂಡ ಈ ವಿಷಯವನ್ನು ಅರಿತಿದ್ದರು. ಆದ್ದರಿಂದ ಅವರು ಆಗಾಗ ಲಲ್ಲೇಶ್ವರಿ ತಾಯಿಯವರನ್ನು ಕರೆದು ಪ್ರೀತಿಯಿಂದ,“ಮಗಳೇ, ನಾನು ಯಾವಾಗಲೂ ದೇಹದಲ್ಲಿ ಇರಲಾರೆ. ನಾನು ಹೋದ ಮೇಲೂ ನೀನು ಕುಗ್ಗಬಾರದು. ಗಟ್ಟಿಯಾಗಿ ನಿಲ್ಲಬೇಕು. ನಮ್ಮ ಪರಂಪರೆಯನ್ನು, ನಮ್ಮ ಮೌಲ್ಯಗಳನ್ನು, ನಮ್ಮ ಸೇವೆಯ ಮಾರ್ಗವನ್ನು ಮುಂದುವರಿಸಬೇಕು…”ಎಂದು ಹೇಳುತ್ತಿದ್ದರು.ಆದರೆ ಆ ಮಾತು ಕೇಳಿದ ಕೂಡಲೇ ಲಲ್ಲೇಶ್ವರಿ ತಾಯಿಯವರ ಮನಸ್ಸು ತಲ್ಲಣಗೊಳ್ಳುತ್ತಿತ್ತು.“ಅವ್ವಾ, ಆ ಮಾತು ಹೇಳಬೇಡ! ನೀನು ಇಲ್ಲದಿರುವುದನ್ನು ನಾನು

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ- “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ- ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಕದಿರ ರೆಮ್ಮವ್ವೆ  -ಅವಿರಳ ವಚನಕಾರ್ತೆ. ಅವಳು ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನ ಕ್ರಾಂತಿಯಲ್ಲಿ   ಪಾಲ್ಗೊಂಡು ರಾಟಿಯಿಂದ ಕದಿರು ತೆಗೆದು ನೂಲುವ ಕಾಯಕದವಳಾಗಿದ್ದವಳು.ತೆಗೆದ ನೂಲನ್ನು ಮಾರಿ ಬಂದ ಹಣದಲ್ಲಿ ಗುರು ಲಿಂಗ ಜಂಗಮ ದಾಸೋಹ ಮಾಡಿ ಬದುಕಿದಳು..ಬಹುತೇಕರು ಈಕೆಯ ಕಾಲವನ್ನು ಬಸವಾದಿ ಪ್ರಮಥರ ಕಾಲವೆಂದು ನಿರ್ಣಯಿಸುತ್ತಾರೆ . ಡಾ ಎಲ್ ಬಸವರಾಜು ಅವರು ಇವಳ ವಚನದಲ್ಲಿ ಬರುವ “ಪರದಳ  ವಿಭಾಡ”  “ಗಜವೇಂಟೆಕಾರ ” ಎಂಬ ಪದಗಳನ್ನು ಗಮನಿಸಿ ಇವಳು ವಿಜಯನಗರದ 1430  ಕಾಲದ ವಚನಕಾರ್ತೆ ಎಂದು ತೀರ್ಮಾನಿಸುತ್ತಾರೆ. ಆದರೆ ಹರಿಹರ ತನ್ನ ರಗಳೆಯಲ್ಲಿ ಕದಿರ ರೆಮ್ಮವ್ವೆಯನ್ನು ಸ್ಮರಿಸಿದ್ದಾನೆ. ಪಾಲ್ಗುರಿಕೆ ಸೋಮನಾಥನು ತನ್ನ ಪಂಡಿತಾರಾಧ್ಯ ಚರಿತ್ರೆಯಲ್ಲಿ ಕದಿರ ರೆಮ್ಮವ್ವೆ ಶರಣೆಯ  ಉಲ್ಲೇಖವಿದೆ. ಅಲ್ಲದೆ ಕದಿರು ಕಾಯಕದ ಕದಿರ ರೆಮ್ಮವ್ವೆಯ ಒಂದು ವಚನದಲ್ಲಿ ಬಸವಣ್ಣ ,ಚೆನ್ನ ಬಸವಣ್ಣ ಪ್ರಭುದೇವರನ್ನು ಸ್ಮರಿಸಿದ್ದಾಳೆ.ಶರಣರ ವಚನಗಳ ಜೊತೆ ಈಕೆಯ ವಚನಗಳು ಮತ್ತು ಸಕಲ ಪುರಾತನರ ವಚನಗಳು ಹಾಗು ಇತರ ಸ್ಥಲ ಕಟ್ಟಿನ ವಚನಗಳಲ್ಲಿ ಸಮಾವೇಶಗೊಂಡಿರುವುದು ಕದಿರು ರೆಮವ್ವೆ  ಬಸವ ಕಾಲಿನ ಶರಣೆ ಎನ್ನಲು ಹೆಚ್ಚು ಪುಷ್ಟಿ ಸಿಗುತ್ತವೆ. 1620  ರ ಶಂಕರ ದೇವನ “ಇಷ್ಟಲಿಂಗ ಚಾರಿತ್ರ್ಯ ” ಅಜ್ಞಾತ ಕವಿಯ   “ನೂರೆಂಟು ಶರಣೆಯರ ಅಷ್ಟಕ “ದಲ್ಲಿ ಕದಿರ ರೆಮ್ಮವ್ವೆ ಯ ಉಲ್ಲೇಖ ಕಂಡು ಬಂದಿದೆ. ಹೀಗಾಗಿ  ಕದಿರ ರೆಮ್ಮವ್ವೆ ಹನ್ನೆರಡನೆಯ ಶತಮಾನದ ಬಸವಾದಿ ಪ್ರಮಥರ ಸಂಕುಲಕೆ ಸೇರಿದ ಶರಣೆ ಎಂದು ಗಟ್ಟಿಯಾಗಿ ನಿರ್ಧರಿಸಬಹುದು.. ಕದಿರ ರೆಮ್ಮವ್ವೆ  ಒಬ್ಬ ನಿಷ್ಠಾವಂತ ನೇಕಾರ ಕುಟುಂಬದ ಕಾಯಕಜೀವಿ. ರಾಟಿಯಿಂದ ನೂಲು ತೆಗೆಯುವುದು ,ನೂಲನ್ನು ಮಾರಿ ಬಂದ ಆದಾಯದಿಂದ ಜಂಗಮ ಸೇವೆ ಕೈಗೊಳ್ಳುವ ಸತ್ಯ ಶುದ್ಧ ಶರಣೆ.ಇವಳ ಗಂಡನ ಬಗ್ಗೆ ಯಾವುದೇ ದಾಖಲೆಗಳಿಲ್ಲ . ಅವಳು ತನ್ನ ಕಾಯಕದ ಜೊತೆಗೆ ನಿತ್ಯ ಅನುಭಾವದ ಗೋಷ್ಠಿಯಲ್ಲಿ ಪಾಲ್ಗೊಂಡು ಲೌಕಿಕ ಪಾರಮಾರ್ಥಿಕ ಚಿಂತನೆಗಳಲ್ಲಿ ಭಾಗವಹಿಸುತ್ತಿದ್ದಳು.ಅವಳ ಎರಡು ವಚನದಲ್ಲಿ ನಿರಾಕಾರದ ಗಂಡನ ಬಗ್ಗೆ ಒಲವು ತೋರಿಸಿದನ್ನು ನೋಡಿದರೆ ಅವಳು ಅವಿವಾಹಿತೆಯಾಗಿರಬಹುದು ಎಂದು ನನ್ನ ಗ್ರಹಿಕೆಯಾಗಿದೆ. ಕದಿರ ರೆಮ್ಮವ್ವೆ  ನಾಲ್ಕು ವಚನಗಳು ಮಾತ್ರ ದೊರೆತಿವೆ.” ಕದಿರ ರೆಮ್ಮಿವೊಡೆಯ  ಗುಮ್ಮೆಶ್ವರ ” ನಾಲ್ಕು ವಚನಗಳಲ್ಲಿ ಎರಡುವಚನಗಳು  ಸತಿ ಪತಿ ದಾಂಪತ್ಯ ಧರ್ಮಕ್ಕೆ ಸಂಬಂಧ ಪಟ್ಟ ಅಲೌಕಿಕ ವಿಚಾರಗಳು ,ಒಂದು ವಚನದಲ್ಲಿ ಶರಣರ ಸ್ತುತಿ ಕಂಡು ಬಂದಿದೆ. ಇನ್ನೊಂದರಲ್ಲಿ ಕಾಯಕದ ಮಹತ್ವ ಅಡಕವಾಗಿದೆ. ಎನ್ನ ಸ್ಥೂಲ ತನುವೆ ಬಸವಣ್ಣನಯ್ಯಾ  ಎನ್ನ ಸೂಕ್ಷ್ಮ ತನುವೆ ಚೆನ್ನ ಬಸವಣ್ಣನಯ್ಯ  ಎನ್ನ ಕಾರಣ ತನುವೆ ಪ್ರಭುದೇವರಯ್ಯಾ  ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ  ಕದಿರ ರೆಮ್ಮಿಯೊಡೆಯ   ಗುಮ್ಮೆಶ್ವರಾ-  ಎನ್ನುವಲ್ಲಿ   ಕದಿರ ರೆಮ್ಮವ್ವೆ  -ತನ್ನ ವಚನದಲ್ಲಿ ಬಸವಣ್ಣ ತನ್ನ ಸ್ಥೂಲ ಶರೀರದ ಗುರುತು. ತನ್ನ ಆಕಾರ ಅನುಭಾವದ ತನುವು. ತನಗೆ ಶರಣೆಯ ಮುದ್ರೆಯನ್ನೊತ್ತಿದ ಬಸವಣ್ಣನು ತನ್ನ ಸ್ಥೂಲ ಶರೀರಕ್ಕೆ ತನುವಾಗುತ್ತಾನೆ ಎಂದು ಹೇಳುತ್ತಾ ಬಸವಣ್ಣನವರ ಕಲ್ಯಾಣ ಸಮತೆಯ ಕ್ರಾಂತಿಯಲ್ಲಿ ಕದಿರ ರೆಮ್ಮವ್ವೆಗೆ ಸ್ಥಾನ ದೊರಕಿಸಿ  ತನ್ನ ಕಾಯ ಶರೀರದ ಸ್ಥೂಲ ತನುವಾದವರು ಬಸವಣ್ಣ ಎಂದು ಅಭಿಮಾನದಿಂದ ಹೇಳುತ್ತಾಳೆ. ಇನ್ನು ತನ್ನ ಸೂಕ್ಶ್ಮ ಶರೀರದ ಕಣ್ಣಿಗೆ ಕಾಣದ ಭಾವ ಸೂಕ್ಷ್ಮತೆಯ ತನುವು ಚೆನ್ನ ಬಸವಣ್ಣ, ಚೆನ್ನಬಸವಣ್ಣನವರ ಷಟಸ್ಥಲ ಅರಿವಿನ ಜ್ಞಾನ ಸ್ಥೂಲ ಶರೀರದ ಮನೋ  ವಿಕಸನಕೆ ಕಾರಣವು. ಇಂತಹ ಸೂಕ್ಷ್ಮ ಶರೀರದ ತನುವು ಚೆನ್ನ ಬಸವಣ್ಣ . ಅದೇ ರೀತಿ ಶರೀರ ಪ್ರಾಣ ಆತ್ಮವು ಕ್ರಮವಾಗಿ  ಸ್ಥೂಲ ,ಸೂಕ್ಷ್ಮ ಕಾರಣವಾಗಿ ತನ್ನ ಆತ್ಮದ ಕಾರಣ ತನುವಿಗೆ ಅಲ್ಲಮರು ಕಾರಣ ಎಂದು ಹೇಳುತ್ತಾ ತನ್ನನ್ನು ಅಲ್ಲಮರ ಆಪ್ತವಲಯದಲ್ಲಿ ಗುರುತಿಸಿಕೊಳ್ಳುತ್ತಾಳೆ. ಕದಿರ ರೆಮ್ಮವ್ವೆ ತನ್ನ ಕಾಯಕದ ಬಗ್ಗೆ ಹೆಮ್ಮೆಯಿಂದ ಹೇಳುತ್ತಾಳೆ. ನಾ ತಿರುಹುವ ರಾಟೆಯ ಕುಲಜಾತಿಯ ಕೇಳಿರಣ್ಣಾ : ಅಡಿಯ ಹಲಗೆ ಬ್ರಹ್ಮ ,ತೋರಣ ವಿಷ್ಣು  ನಿಂದ ಬೋಂಬೆ ಮಹಾರುದ್ರ  ರುದ್ರನ ಬೆಂಬಳಿಯವೆರಡು ಸೂತ್ರ ಕರ್ಣ . ಅರಿವೆಂಬ ಕದಿರು ,ಭಕ್ತಿಯೇನೆಂಬ ಕೈಯಲ್ಲಿ ತಿರುಹಲಾಗಿ ಸುತ್ತಿತ್ತು ನೂಲು ಕದಿರು ತುಂಬಿತ್ತು. ರಾಟೆಯ ತಿರುಹಲಾರೆ -ಎನ್ನ ಗಂಡ ಕುಟ್ಟಿಹ ಇನ್ನೇವೆ  ” ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ  “? ಇದು ತನ್ನ ಬದುಕಿಗೆ ಸಂಬಂಧ ಪಟ್ಟ ಕಾಯಕದ ವಚನವಾಗಿದೆ. ಮೇಲ್ನೋಟಕ್ಕೆ ಇದು ಕಾಯಕದ ವಚನವಾದರೂ ಈ ವಚನದಲ್ಲಿ ಅತ್ಯಂತ ಪಾರಮಾರ್ಥಿಕ ಅರ್ಥವನ್ನು ಕದಿರು ರೆಮ್ಮವ್ವೆ ವ್ಯಕ್ತ ಪಡಿಸಿದ್ದಾಳೆ .ಕದಿರ  ರೆಮ್ಮವ್ವೆ ತನ್ನ ಕುಲ ಕಸುಬು ಹಾಗು ಕೀಳು ಜಾತಿಯ ಉಲ್ಲೇಖ ಮಾಡಿದ್ದಾಳೆ. ಜೊತೆಗೆ ತಿರುಹುವ ರಾಟಿಗೆ ಅದರ ಅಡಿಯ ಹಲಗೆ ಬ್ರಹ್ಮ ಅದಕ್ಕೆ ಕಟ್ಟಿದ ತೋರಣವೇ ವಿಷ್ಣು ,ರಾಟೆಗೆ ಕಟ್ಟಿದ ಬೋಂಬೆ ಮಹಾರುದ್ರ ರುದ್ರನ ಬೆಂಬಲಕೆ ಎರಡು ಸೂತ್ರ ಕರ್ಣಗಳು .ಇಂತಹ ರಾಟೆಯಿಂದ ನೂತಾಗ ಹೊರಡುವ ಅರಿವೇ ಕದಿರು..ಭಕ್ತಿಯಿಂದ ತಿರುಹಲಾಗಿ ನೂಲು ಸುತ್ತಿಕೊಂಡಿತ್ತು,ಮತ್ತು ಕದಿರು ತುಂಬಿತ್ತು . ಕದಿರ ತುಂಬಿದ ಮೇಲೆ ಮತ್ತೆ ರಾಟೆಯ ತಿರುಹಲಾರೆ.ಇಲ್ಲಿ ಬ್ರಹ್ಮ ವಿಷ್ಣು ರುದ್ರ ಮಹಾರುದ್ರ ಎಂಬ ದೈವೀ ಕಲ್ಪನೆಯನ್ನೇ ತಾನು ನೂಲುವ ಕದಿರಿನ  ಹಲಗೆಯನ್ನು ಬ್ರಹ್ಮವೆಂತಲೂ ,ಕಾರಣ ಹಲಗೆ ಗಟ್ಟಿಯಾಗಿದ್ದರೆ ತಾನಷ್ಟೇ ಕದಿರು ತೆಗೆಯುವವರು ಅದರ ಮೇಲೆ ಕುಳಿತು ನೂಲಬಹುದು ಅದು ಕದಿರಿನ    ಉತ್ಪತ್ತಿಯ ಆರಂಭ  (ಸೃಷ್ಟಿ ).ಅದೇ ರೀತಿ ಕದಿರಿಗೆ ಕಟ್ಟುವ ತೋರಣವು ವಿಷ್ಣು -ಇದು ಸ್ಥಿತಿ ಪ್ರಜ್ಞೆಯಾಗಿದೆ. ಲಯದ ಸಂಕೇತವಾದ ರುದ್ರನು ಕದಿರಿನ ಹೆಮ್ಮೊಳೆ-ಲೋಹದ ತುಂಡು ಕದಿರು ತೆಗೆಯುವ ಸಾಧನ. (spikes ) .ಇಲ್ಲಿಂದ ಉತ್ಪತ್ತಿಯಾಗುವ ಅರಿವೇ ಕದಿರು .ಭಕ್ತಿಯ ಕೈಯಲ್ಲಿ ರಾಟಿ ತಿರುಹಲಾಗಿ  ನೂಲು ಸುತ್ತಿಕೊಳ್ಳಹತ್ತಿತು ಮತ್ತು ಕದಿರು ತುಂಬಿ ಬಿಟ್ಟಿತು. ಪ್ರಾಪಂಚಿಕ ಪಾರಮಾರ್ಥಿಕ ನಿಲುವುಗಳನ್ನು ಸಮನ್ವಯಿಸುವ  ಪ್ರಯತ್ನ ಇದಾಗಿದೆ..ಅಗತ್ಯಕ್ಕಿಂತ ಹೆಚ್ಚಿನ ಆದಾಯ ತಿರಸ್ಕರಿಸಿದ ಶರಣೆ ರೆಮ್ಮವ್ವೆ ಹಾಗೇನಾದರೂ ಹೆಚ್ಚಿಗೆ ಕದಿರ ತೆಗೆದು ಆದಾಯಮಾಡಿಕೊಂಡರೆ ತನ್ನ ಲಿಂಗವೆಂಬ ಗಂಡ ತನ್ನನ್ನು ಕುಟ್ಟಿಹ ಶಿಕ್ಷಿಸುವ ಎಂದು ತನ್ನನ್ನು ತಾನೇ ಎಚ್ಚರಿಸಿಕೊಳ್ಳುತ್ತಾಳೆ.ತನ್ನ ಸಾಂಸಾರಿಕ ಬದುಕಿನಲ್ಲಿ ಪಾರಮಾರ್ಥಿಕ ಚಿಂತನೆ ಮಾಡುತ್ತಾ ಜೀವನ ಸಾಗಿಸಿದ ದಿಟ್ಟ ಶರಣೆ ಕದಿರ ರೆಮ್ಮವ್ವೆ. “  ಕದಿರು ರೆಮ್ಮವ್ವೆ – ಎರಡು ವಚನಗಳು ತನ್ನ ಪ್ರಾಪಂಚಿಕ ಬದುಕಿನ ಕುರಿತಾಗಿ ಎಂದು ಮೇಲು ನೋಟಕ್ಕೆ ಕಂಡರೂ ಅದರ ಹಿಂದಿನ ಆಧ್ಯಾತ್ಮಿಕ ಬೆಡಗನ್ನು ರೆಮ್ಮವ್ವೆ ಸೊಗಸಾಗಿ ವರ್ಣಿಸಿದ್ದಾಳೆ. ನಿರಾಕಾರ ಚೈತನ್ಯವೇ ತನ್ನ ಗಂಡವೆಂದು ಅಕ್ಕ ಮಹಾದೇವಿಯ ಹಾಗೆ ನಿರೂಪಿಸಿದ ವಚನಗಳ ಕಾಣಬಹುದು. ಎಲ್ಲರ ಹೆಂಡಿರು ತೊಳಸಿಕ್ಕುವರು;   ಎನ್ನ ಗಂಡಂಗೆ ತೊಳಸುವುದಿಲ್ಲ.   ಎಲ್ಲರ ಗಂಡಂದಿರಿಗೆ ಬಸಿವರು;   ಎನ್ನ ಗಂಡಂಗೆ ಬಸಿವುದಿಲ್ಲ. ಎಲ್ಲರ ಗಂಡಂದಿರಿಗೆ ಬೀಜವುಂಟು;   ಎನ್ನ ಗಂಡಂಗೆ ಅಂಡದ ಬೀಜವಿಲ್ಲ.   ಎಲ್ಲರ ಗಂಡಂದಿರು ಮೇಲೆ;   ಎನ್ನ ಗಂಡ ಕೆಳಗೆ, ನಾ ಮೇಲೆ.   ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.  ಪ್ರತಿಯೊಬ್ಬ ಹೆಂಡತಿ ತಾನು ಪತಿಯ ದಾಸಿಯಾಗುವಳು .ಆದರೆ ಕದಿರ ರೆಮ್ಮವ್ವೆ ತಾನು ದಾಸಿಯಾಗುವದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾಳೆ.ಎಲ್ಲ ಗಂಡಂದಿರರಿಂದ ಹೆಂಡತಿ ಬಸಿರಾಗುವಳು.ಆದರೆ ತಾನು ತನ್ನ ಗಂಡನಿಗೆ ಕೇವಲ ಬಸಿರಾಗುವುದಕ್ಕೆ ಬದುಕಿಲ್ಲ ಎಂದಿದ್ದಾಳೆ. ತನ್ನ ಗಂಡ ಕೇವಲ ವಿಷಯಾದಿಗಳ ಹುಟ್ಟು ಸಾವಿಗೆ ಕಾರಣವಾಗುವ ವ್ಯಕ್ತಿಯಲ್ಲ ಎಂದು ನಿರೂಪಿಸಿದ್ದಾಳೆ.ಎಲ್ಲ ಗಂಡರಿಗೆ  ಉತ್ಪತ್ತಿಯ ಬೀಜವಿದೆ ಆದರೆ ತನ್ನ ಗಂಡನಿಗೆ ಅಂಡದ ಅಂದರೆ ಕೇವಲ ಉತ್ಪತಿಗೆ ಬೇಕಾದ ಬೀಜ (fertile )  ಇಲ್ಲವೆನ್ನುತ್ತಾಳೆ.ಎಲ್ಲರ ಗಂಡ ಮೇಲೆ ಎಂದು ಸಾರುವ ಭಾರತೀಯ ಮಹಿಳೆಯರಿಗೆ ಕದಿರ ರೆಮ್ಮವ್ವೆ  ಸವಾಲಾಗುತ್ತಾಳೆ.ತನ್ನ ಗಂಡ ಕೆಳಗೆ ತಾನು ಮೇಲೆ ಎಂದು ಹೆಮ್ಮೆಯಿಂದ ಹೇಳುವ ಕದಿರ ರೆಮ್ಮವ್ವೆ ತಾನು ಲಿಂಗ ಭೇದ ನಿರಾಕರಿಸಿ ನಿರಾಕಾರ ಸ್ವರೂಪದ ಸಾಕಾರದ ಲಿಂಗವೇ ತನ್ನ ಗಂಡ ಎಂದು ಹೇಳಿಕೊಳ್ಳುತ್ತಾಳೆ. ಎಲ್ಲರ ಗಂಡಂದಿರು ಪರದಳವಿಭಾಡರು;   ಎನ್ನ ಗಂಡ ಮನದಳವಿಭಾಡ.  ಎಲ್ಲರ ಗಂಡಂದಿರು ಗಜವೇಂಟೆಕಾರರು;   ಎನ್ನ ಗಂಡ ಮನವೇಂಟೆಕಾರ.   ಎಲ್ಲರ ಗಂಡಂದಿರು ತಂದಿಕ್ಕಿಸಿಕೊಂಬರು;   ಎನ್ನ ಗಂಡ ತಾರದೆ ಇಕ್ಕಿಸಿಕೊಂಬ.   ಎಲ್ಲರ ಗಂಡಂದಿರಿಗೆ ಮೂರು,   ಎನ್ನ ಗಂಡಂಗೆ ಅದೊಂದೆ;   ಅದೊಂದೂ ಸಂದೇಹ,ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.  ಕದಿರ ರೆಮ್ಮವ್ವೆ ತನ್ನ ಮತ್ತು ಇತರ ಭವಿಗಳ ಗಂಡಂದಿರ ಗುಣ ಸ್ವಭಾವಗಳನ್ನು ವಿವರಿಸುತ್ತಾ,ತನ್ನ ಗಂಡನಿಗೂ ಮತ್ತು ಇತರ ಮಹಿಳೆಯರ ಗಂಡಂದಿರರಿಗೂ   ಇರುವ ವ್ಯತ್ಯಾಸವನ್ನು ಮತ್ತೆ ಮತ್ತೆ ಕೆಣಕಿದ್ದಾಳೆ   . ಎಲ್ಲರ ಗಂಡಂದಿರರು ಪರರ ಅಳಲನ್ನು ವಿನಾಶ ಮಾಡಿದರೆ ,ತನ್ನ ಗಂಡ ತನ್ನ ಮನದ ಅಳಲನ್ನು ನಾಶ ಮಾಡುತ್ತಾನೆ .ಎಲ್ಲರ ಗಂಡರು ಆನೆಯನ್ನು ಭೇಟೆಯಾಡಿದರೆ. ತನ್ನ ಗಂಡ ವಿಷಯಾದಿಗಳನ್ನು ತುಂಬಿದ ಮನದ ಭೇಟೆಯಾಡುವವನು.ಉಳಿದ ಗಂಡಂದಿರರು ತಂದದ್ದನ್ನು ತಿನ್ನುವವರು .ತನ್ನ ಗಂಡ ತಾರದೆ ತಿನ್ನುವವನು.ಎಲ್ಲರ ಗಂಡಂದಿರರು ಸೃಷ್ಟಿ ಸ್ಥಿತಿ ಲಯ -ಸ್ಥೂಲ ಸೂಕ್ಷ್ಮ ಹಾಗು ಕಾರಣ ಶರೀರಕ್ಕೆ  ಅಂಟಿಕೊಂಡವ್ರು. ತನ್ನ ಗಂಡ ಮಾತ್ರ ಕಾರಣ ಶರೀರಕ್ಕೆ ನಿಂತ ಚೈತನ್ಯ ಚೇತನವೆನ್ನುತ್ತಾಳೆ ಕದಿರ ರೆಮ್ಮವ್ವೆ.. ತುಂಬಾ ಗಹನವಾದ ವಿಷಯವನ್ನು ಸಲೀಲಾಗಿ ಹೇಳುವ ಶರಣೆಯ ವಚನದಲ್ಲಿ ಅಕ್ಕ ಮಹಾದೇವಿಯ ಚೆನ್ನ ಮಲ್ಲಿಕಾರ್ಜುನನ್ನು ನೆನಯುವ ಧ್ವನಿ ಧೋರಣೆ ಎದ್ದು ಕಾಣುತ್ತದೆ.ಕದಿರ ರೆಮ್ಮವ್ವೆಯ ವಚನಗಳಲ್ಲಿ ತಾನು ಪ್ರಾಪಂಚಿಕ ಬದುಕಿಗೆ  ಮಾತ್ರ ಸೀಮಿತವಲ್ಲ ತಾನು ಆಧ್ಯಾತ್ಮಿಕ ಪಾರಮಾರ್ಥಿಕ ಸುಖವನ್ನು ಉಣ್ಣಲು ಬಂದವಳು ಎಂದಿದ್ದಾಳೆ. ಹೀಗೆ ಲಿಂಗ ಭೇದವಳಿದು ತಾನೇ ಲಿಂಗವಾದ ಬಗೆಯನ್ನು ಅರ್ಥಪೂರ್ಣವಾಗಿ ವಿವರಿಸಿದ ಅತ್ಯಂತ ಜ್ಞಾನಿ ಅವಿರಳ ವಚನಕಾರ್ತೆ   ಕದಿರ ರೆಮ್ಮವ್ವೆ . ಕದಿರ ರೆಮ್ಮವ್ವೆಯ ಸಿಕ್ಕ ನಾಲ್ಕು ವಚನಗಳು ಅತ್ಯಂತ ಉತ್ಕೃಷ್ಟ ಚಿಂತನೆಯಿಂದ ಕೂಡಿವೆ.ಅವಳ ವಚನದ ಅಂಕಿತವು ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ”. ಗುಮ್ಮೆಶ್ವರ-ಇದು ಗುಹೇಶ್ವರ  ಅಂಕಿತದ ಸಾಮ್ಯತೆ ಇದ್ದು  ಪಾಠಾಂತರ   ಸಮಯದಲ್ಲಿ ಇದು ಗುಮ್ಮೆಶ್ವರ ಆದ ಎಲ್ಲಾ ಸಾಧ್ಯತೆಗಳಿವೆ. ಕದಿರ ರೆಮ್ಮವ್ವೆ ಅಲ್ಲಮ ಪ್ರಭುವಿನ ಗರಡಿಯಲ್ಲಿ ಬೆಳೆದಳವಳು . ತನ್ನ ಒಂದು ವಚನದಲ್ಲಿ ತಾನು ಗುರು ಅಲ್ಲಮರ ಕಾರುಣ್ಯವೆಂದು ಹೇಳಿಕೊಂಡಿದ್ದಾಳೆ. —– ಎನ್ನ ಕಾರಣ ತನುವೆ ಪ್ರಭುದೇವರಯ್ಯಾ         ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ .            ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ ಎಂದು ಹೇಳಿ ತನ್ನ ಗುರುವಿನ ಮೇಲಿನ ಅಭಿಮಾನ ಗೌರವ ಮತ್ತು ಪ್ರೀತಿಯನ್ನು ವ್ಯಕ್ತ ಪಡಿಸಿದ್ದಾಳೆ. ಈ ಕಾರಣದಿಂದ ಅವಳು ಅಲ್ಲಮ ಪ್ರಭುಗಳ ಆಪ್ತ ವಲಯದ ಸಹಾಯಕಿ, ಶಿಷ್ಯೆ ಎಂದು ಪರಿಗಣಿಸಬಹುದು. ನನ್ನ  ಈ ತರ್ಕಕ್ಕೆ ಗ್ರಹಿಕೆಗೆ ಇನ್ನೊಂದು ಕೆಲವು ಕಾರಣಗಳಿವೆ . ಅವುಗಳಲ್ಲಿ ಕಲ್ಯಾಣ ಕ್ರಾಂತಿಯ ಮೊದಲು ಮತ್ತು ನಂತರ ಕೆಲ ಶರಣರು ಕಲ್ಯಾಣವನ್ನು ತೊರೆದರು ಎಂದು ನಮಗೆ ತಿಳಿದು ಬರುತ್ತದೆ. ಹೀಗೆ ಕಲ್ಯಾಣ ರಕ್ತ ಕ್ರಾಂತಿಯ ಮೊದಲೆ ಕಲ್ಯಾಣ ತೊರೆದವರಲ್ಲಿ ಅಕ್ಕ ಮಹಾದೇವಿ  ಮತ್ತು  ಅಲ್ಲಮರು . ಚರಿತ್ರೆ ಇತಿಹಾಸದಲ್ಲಿ  ಲಭ್ಯವಿರುವ ಘಟನಗಳನ್ನಾಧರಿಸಿ ಶರಣರ ಮಾರ್ಗದ ಸಂಭಾವ್ಯತೆಯನ್ನು  ನಿರ್ಧರಿಸಲಾಯಿತು. ಕಳೆದ ಮೂವತ್ತು ವರ್ಷದಿಂದ ನಾನು ಶರಣರ ಸಮಾಧಿಗಳನ್ನು ಅತ್ಯಂತ ಕೂತಹಲದಿಂದ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಅಲ್ಲಮ ಪ್ರಭುಗಳು ತೇರದಾಳದಲ್ಲಿ ಐಕ್ಯರಾಗಿದ್ದಾರೆ ಅಲ್ಲಿ ಪ್ರಭುದೇವರ ಗದ್ದುಗೆ ಇದೆಯೆಂದು    ಚಿಕ್ಕ ಬಾಲಕನಿಂದಲೂ ಕೇಳಿಸಿಕೊಂಡು ಬಂದಿದ್ದೆ.ಆದರೆ ತೇರದಾಳದಲ್ಲಿ ಅಲ್ಲಮರು ಕಲ್ಯಾಣ ತೊರೆದನಂತರ ಕೆಲಕಾಲ ತಂಗಿದ್ದರು ಎಂದು ಮುಂದೆ ಶ್ರೀಶೈಲಕ್ಕೆ  ಹೋಗುತ್ತಾರೆ ಎಂದುತಿಳಿದು ಬರುತ್ತದೆ. ಅಲ್ಲಮ ಪ್ರಭುಗಳು ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ

ಸಾವಿಲ್ಲದ ಶರಣರು ಮಾಲಿಕೆ- “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ -28 ಅರ್ಜುನ ಉವಾಚ ಡಾ.ವಿಶ್ವನಾಥ್‌ ಎನ್‌ ನೇರಳಕಟ್ಟೆ ಶಾಪದ ಕಥೆಗಳನ್ನು ತಿಳಿದು ಮುನ್ಡೆನದದ್ದು ಸ್ತ್ರೀ ರಾಜ್ಯದೆಡೆಗೆ           ಗುರುಗಳನ್ನು ಹಿರಿಯರನ್ನು ದೇವತೆಯರನ್ನು ಕಂಡಾಗ ಪ್ರಣಾಮ ಮಾಡುವುದು ರೂಢಿ. ಪಾರ್ವತಿಯೆದುರಿಗೆ ಬಂದ, ದುಷ್ಟದೃಷ್ಟಿ ಬೀರುತ ನಿಂದ ಆ ದೈತ್ಯ ಶಿವಸತಿಗೆ ನಮಿಸಲಿಲ್ಲ. ಅವಳನ್ನು ಬಯಸಿದ. ಮನ್ಮಥನ ಹೂಬಾಣ ಅವನನ್ನು ಬಾಧಿಸಿತು. ಕಾಮಾತುರಕ್ಕೆ ಒಳಗಾದ ದಾನವ. ಜಗದ ಮಾತೆಯೊಡನೆ ಮದನಕೇಳಿಯಾಡುವ ಕೆಡುಬಯಕೆ ಅವನಲ್ಲಿ ಮೂಡಿತು. ಪಾರ್ವತಿಯನ್ನು ಮಾತನಾಡಿಸಲು ಮುಂದಾದ.    ಮಹಾದೈತ್ಯನ ಮನದಿಂಗಿತ ಅರ್ಥವಾಯಿತು ಅವಳಿಗೆ. ಕಡುಕೋಪದಿಂದ ಕೆಡುಕಿನ ಕಾಯವನ್ನು ದಿಟ್ಟಿಸಿದಳು. ಉರಿಉರಿದು ಬೂದಿಯಾಗಿ ಹೋದ ಆ ರಾಕ್ಷಸ.  ಬಳಿಕ ಪಾರ್ವತಿದೇವಿ ಶಾಪರೂಪದ ಮಾತೊಂದನ್ನು ಆಡಿದಳು. “ಇಂದಿನಿಂದ ಈ ವನಕ್ಕೆ ಕಾಲಿಡುವ ಪುರುಷ ರೂಪದ ಪ್ರಾಣಿಗಳೆಲ್ಲವೂ ಹೆಣ್ಣಾಗಿ ಹೋಗಲಿ” ಎಂಬ ನುಡಿಯದು ಅವಳಿಂದ ಹೊರಬಂತು. ತನ್ನನ್ನೇ ಬಯಸಿದ ಅಸುರನ ಹೀನ ಗಂಡಸ್ತನದ ಬಗೆಗೆ ಆಕ್ರೋಶ ಹುಟ್ಟಿದ್ದು ಖಚಿತ ಅವಳಲ್ಲಿ. ಗಂಡಸ್ತನದ ಬಗೆಗಿನ ತಿರಸ್ಕಾರ ತುರೀಯಾವಸ್ಥೆಯನ್ನು ತಲುಪಿದಾಗ ಹೆಂಗಳೆಯರೇ ತುಂಬಿಹೋದರೆ ಒಳಿತು ಈ ಲೋಕದಲ್ಲಿ ಎಂಬ ಭಾವವೇ ಮೂಡುತ್ತದೋ ಏನೋ! ಆ ಕಾರಣಕ್ಕೇ ಇಂಥದ್ದೊಂದು ಘನಶಾಪ ಇತ್ತಳು ಎನಿಸುತ್ತದೆ, ಮುಂದಣ ಕಾಲಕ್ಕೂ ಸಲ್ಲುವಂತೆ.  ಆ ಬಳಿಕವೂ ಅವಳ ತಪಸ್ಸು ಮುಂದುವರಿಯಿತು. ಯಾವ ತಾಪತ್ರಯವೂ ಎದುರಾಗಲಿಲ್ಲ ಅವಳಿಗೆ ಪುರುಷವರ್ಗದವರಿಂದ. ಶಂಕರವಲ್ಲಭೆಯ ಶಾಪದ ಬಲದಿಂದಲೇ ನಮ್ಮ ಯಾಗದ ಕುದುರೆ ಹೆಣ್ಣಾಗಿ ಬದಲಾದದ್ದು.    ಹುಲಿಯ ರೂಪವನ್ನು ಪಡೆದದ್ದರ ಹಿಂದೆಯೂ ಒಂದು ಕಥಾನಕವಿತ್ತು. ಬಹಳ ಹಿಂದೆ ಅಕೃತವ್ರಣಾಖ್ಯ ಎಂಬ ಬ್ರಾಹ್ಮಣ ದಿವ್ಯಸ್ನಾನವನ್ನು ಮಾಡುವುದಕ್ಕಾಗಿ ಇಲ್ಲಿನ ಸರೋವರಕ್ಕೆ ಬಂದ. ಸಮಸ್ತ ಭೂಮಿಯ ಬಹುಕಡೆಗಳಲ್ಲಿ ತೀರ್ಥಸ್ನಾನವನ್ನು ಪೂರೈಸಿಯೇ ಬಂದಿದ್ದ ಆತ. ಸರೋವರದ ನೀರಿಗಿಳಿದಿದ್ದ ಆತ ವರುಣದೇವರ ಮಂತ್ರವನ್ನು ಜಪಿಸುತ್ತಿದ್ದ.    ಅದೇ ಸಮಯದಲ್ಲಿ ಮೊಸಳೆಯೊಂದು ಬಂದು ಅವನ ಪಾದವನ್ನು ಬಲವಾಗಿ ಕಚ್ಚಿತು. ಕಾಲನ್ನು ಹಿಡಿದು ರಭಸದಿಂದ ಎಳೆಯುತ್ತಿರುವ ಜೀವಿ ಯಾವುದದು ಎನ್ನುವುದು ಆತನ ಅರಿವಿಗೆ ಬರಲಿಲ್ಲ. ಜಲದ ಒಳಗಿದ್ದುದು ಅವನ ಹೊರನೋಟಕ್ಕೆ ದಕ್ಕಲಿಲ್ಲ. ಯಾವುದೋ ರಾಕ್ಷಸರ ಮಾಯೆಯೋ ಏನೋ! ಎಂಬ ಅಳುಕು ಮೂಡಿತು. ಹಾವು ಇರಬಹುದೇ! ಎಂಬ ಸಂಶಯ ಕಾಡಿತು. ದೈತ್ಯ ಗಾತ್ರದ ಮತ್ಸ್ಯವಿರಬೇಕಿದು ಎಂದುಕೊಂಡ. ಮಹಾಸುಳಿಯೆಂದು ಭಾವಿಸಿ ನೊಂದುಕೊಂಡ. ಮೊಸಳೆಯೇ ತನ್ನ ಕಾಲನ್ನು ಹಿಡಿದಿದೆ ಎಂಬ ಯೋಚನೆಯೇ ಬರಲಿಲ್ಲ ಅವನಲ್ಲಿ.  ಹಿಡಿತದಿಂದ ತಪ್ಪಿಸಿಕೊಂಡರೆ ಸಾಕು ಎಂದುಕೊAಡವನು ಬಲವಾಗಿ ಕಾಲನ್ನೊಮ್ಮೆ ಕೊಡವಿದ. ಅವನ ಆ ಬಿರುಸಿಗೆ ಮೊಸಳೆಯ ಬಲಿಷ್ಠ ದಂತಗಳು ಮುರಿದುಹೋದವು. ಹಿಡಿತವದು ಸಡಿಲವಾಯಿತು.    ತಕ್ಷಣವೇ ಸರೋವರದ ದಡವನ್ನು ಸೇರಿಕೊಂಡ ಆ ಬ್ರಾಹ್ಮಣ. ಅವನಿಗೆ ಕೋಪ ಬಂದಿತ್ತು. ನೀರಿನಲ್ಲಿರುವ ದೇವತೆಗಳು ಕೇಳಿಸಿಕೊಳ್ಳಲಿ ಎಂಬAತೆ ನುಡಿದ. “ಈ ಸರೋವರ ದುಷ್ಟಭಾವವನ್ನು ಹೊತ್ತುನಿಂತಿದೆ. ಅತಿಯಾದ ಭಯವನ್ನು ನನ್ನಲ್ಲಿ ಹುಟ್ಟುಹಾಕಿದೆ. ಆ ಕಾರಣಕ್ಕೆ ಇನ್ನುಮುಂದೆ ಈ ಸರೋವರದ ನೀರನ್ನು ಕುಡಿದ ಜೀವಿಗಳು ಭೂಮಿಗೆ ಅತೀ ಭೀತಿಯನ್ನು ಉಂಟುಮಾಡುವAತೆ ಹುಲಿಯಾಗಿ ಹೋಗಲಿ” ಎಂದು ಶಾಪವಿತ್ತ.  ಬೇರೆಲ್ಲಾ ಪ್ರದೇಶಗಳ ನದಿನೀರಿನಲ್ಲಿ ಮಿಂದೆದ್ದಿದ ಅವನಿಗೆ ಇಲ್ಲಿ ಮಾತ್ರ ಈ ಬಗೆಯ ಭಯಾನಕ ಅನುಭವ ಆದದ್ದು. ಆದ್ದರಿಂದಲೇ ಆ ಬಗೆಯ ಶಾಪವೊಂದನ್ನು ಕೊಟ್ಟ ಸರೋವರದ ನೀರಿಗೆ. ಹುಲಿಯಾಗಲು ಇಚ್ಛಿಸದೆ ಸರೋವರದ ಜಲವನ್ನು ಸರ್ವ ಜೀವಿಗಳೂ ತಿರಸ್ಕರಿಸುವಂತಾಗಲಿ ಎಂಬ ಉದ್ದೇಶ ಇದ್ದಿರಬಹುದು ಅವನಲ್ಲಿ. ಈ ಕಾರಣಕ್ಕೆ ನಮ್ಮ ಯಜ್ಞಾಶ್ವ ವ್ಯಾಘ್ರವಾಗಿ ಪರಿವರ್ತನೆಯಾದದ್ದು.    ಕುದುರೆಯ ಈ ಬಗೆಯ ರೂಪಾಂತರವನ್ನು ಆ ಕೃಷ್ಣನ ಸ್ಮರಣೆಯ ಬಲದಿಂದ ಸರಿಮಾಡಿದೆ. ನನ್ನ ಜೊತೆಗೆ ಇದ್ದ ಸೈನಿಕರು ನನ್ನ ಪ್ರಾರ್ಥನೆಗೆ ಶ್ರೀಕೃಷ್ಣ ಪ್ರತಿಸ್ಪಂದಿಸಿದ ಬಗೆಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದರು. “ಆಪತ್ತಿನ ಭೀತಿ ಈ ಪಾಂಡವರನ್ನು ಯಾವತ್ತಿಗೂ ಬಾಧಿಸಲಾರದು. ಇವರಿಗೆ ನೋವಾಗುವುದನ್ನು, ಭಯ ಎದುರಾಗುವುದನ್ನು ಆ ಕೃಷ್ಣ ಸಹಿಸಲಾರನು. ಅವನ ನೆರವು ಇವರಿಗೆ ಯಾವಾಗಲೂ ಇದೆ” ಎಂದು ಸೈನಿಕರು ಮಾತನಾಡುತ್ತಿದ್ದುದನ್ನು ಕೇಳಿ ಹೆಮ್ಮೆಯ ಭಾವ ಮೂಡಿತು. “ಶ್ರೀಕೃಷ್ಣ ತನ್ನ ಭಕ್ತರನ್ನು ಯಾವತ್ತೂ ಕಾಪಾಡುತ್ತಾನೆ ಎನ್ನುವುದು ಈ ಕ್ಷಣಕ್ಕೆ ಮತ್ತೊಮ್ಮೆ ಸಾಬೀತಾಯಿತು. ನಂಬಿದವರ ರಕ್ಷಣೆ ಮಾಡುವುದೇ ಮಹಾಸಂತೋಷ ಆ ಅಸುರಾರಿಗೆ. ಅಶ್ವಮೇಧ ಯಾಗಕ್ಕೆ ಅಡಿಗಡಿಗೆ ಎದುರಾದ ಅಡೆತಡೆಗಳನ್ನು ಮೀರಿ ಪಾಂಡುರಾಜನ ಸುತರನ್ನು ಅಪಾಯದಿಂದ ಪಾರುಮಾಡುವುದನ್ನೇ ಮಹಾಕಾರ್ಯವಾಗಿಸಿಕೊಂಡಿದ್ದಾನೆ ಆ ಮೋಹಕ ಮಾಧವ” ಎಂಬ ಮಾತೂ ಕೇಳಿಬಂತು. ಹೆಣ್ಣು ಕುದುರೆಯಾಗಿ ಹುಲಿಯಾಗಿ ಮತ್ತೆ ನಿಜರೂಪವನ್ನು ಕುದುರೆ ಪಡೆದುದನ್ನು ಬಗೆಬಗೆಯ ವಾದ್ಯಗಳ ಶಬ್ದವನ್ನೆಬ್ಬಿಸಿ ಸಂಭ್ರಮಿಸಿದರು ನಮ್ಮ ಪಾಳಯದ ಸೈನಿಕರು.  ಅತೀವವಾಗಿ ಹಿಗ್ಗಿದೆ ನಾನು. ಶ್ರೀಕೃಷ್ಣ ನಮಗಿತ್ತ ಉಪಕಾರವನ್ನು ನಮ್ಮ ಸೇನೆ ಅರಿತಿದೆಯಲ್ಲಾ ಎಂದು ಸಂಭ್ರಮಿಸಿದೆ. ಜಗವೆಲ್ಲಾ ಅರಿಯುವಂತೆ ಆ ಹರಿಯಿಂದ ಮಹದುಪಕಾರವನ್ನು ಪಡೆಯುತ್ತಿರುವ ನಾನೇ ಧನ್ಯ ಎಂಬ ಭಾವ ಮೂಡಿತು ನನ್ನಲ್ಲಿ.  ಪಾರಿಪ್ಲವ ದೇಶದಿಂದ ನಮ್ಮ ಕುದುರೆ ಮುಂದಕ್ಕೆ ಚಲಿಸಿತು. ಅತಿವೇಗ ಪಡೆಯಿತು ಅದರ ಚಲನೆ. ಬಹಳ ದೇಶಗಳು ಕಳೆದುಹೋದವು. ಈಗ ಕುದುರೆ ಸಾಗುತ್ತಿದ್ದುದು ರಾಜ್ಯದ ಒಳಸೀಮೆಯಲ್ಲಿ. ಅದಾವ ಪ್ರದೇಶ ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡೆ. ಹೆಂಗಳೆಯರು ಮಾತ್ರವೇ ಇರುವ ಪ್ರದೇಶ ಅದೆನ್ನುವುದು ತಿಳಿದುಬಂತು…  ಡಾ. ವಿಶ್ವನಾಥ ಎನ್ ನೇರಳಕಟ್ಟೆ    

Read Post »

ಅಂಕಣ ಸಂಗಾತಿ, ಮನದ ಮಾತುಗಳು

ಅಂಕಣ ಸಂಗಾತಿ ಮನದ ಮಾತುಗಳು ಜ್ಯೋತಿ ಡಿ.ಬೊಮ್ಮಾ ಸುಲಗ್ನ ಸಾವಧಾನ.. ಈ ವರ್ಷದ ಬ್ಯಾಸಗಿ ಧಗಿಗಿ ನಮ್ಮ ಉತ್ತರ ಕರ್ನಾಟಕ ದ ಮಂದಿ ಒಣಗಿದ ಹಪ್ಪಳಂಗ ಆಗಿಬಿಟ್ಟಿವಿ. ಸದಾ ಬಿಸಿಲು ಧಗಿದಾಗೆ ಇರೋ ನಮಗೂ ಈ ವರ್ಷ ಬಿಸಿಲಿನ ತಾಪ ಬಾಳ ಸಾಕಮಾಡ್ತು.ಮಳಿ ಬಂದ್ರೂ ನಮ್ಮ ಕಡಿ ಧಗಿ ಕಮ್ಮಿ ಆಗಲ್ಲ.ಇನ್ನೂ ಹೆಚ್ಚೆ ಆಗತದ.ಕಾದ ಹಂಚಿನ ಮ್ಯಾಲ್ ನೀರು ಸುರುದ ಮ್ಯಾಲ ಬರೋ ಉಗ ಹ್ಯಾಂಗ್ ಶಾಖ ಕೊಡತದ , ಆ ನಮೂನಿ ಮಳಿಗಾಲದ ಧಗಿ ಇರತದ. ಇದರೊಂದಿಗೆ ಬದುಕು ಸಾಗತಿರತದ.ಪ್ರಕೃತಿ ಅದರ ಕೆಲಸ ಮಾಡತಿರತದ.ಅದರೊಂದಿಗೆ ನಮ್ಮ  ಬದುಕು ಸಾಗತಿರತದ.ಈ ವರ್ಷ ಬ್ಯಾಸಗಿದಾಗ ಮದುವೆಗಳ ಭರಾಟಿ ಬಾಳ ಇತ್ತು.ವಯಸ್ಸಿಗಿ ಬಂದ ಮಕ್ಕಳಿಗಿ ಮದುವೆ ಮಾಡೊದು ಒಂದು ದೊಡ್ಡ ಜವಾಬ್ದಾರಿ ಹೆತ್ತವರಿಗಿ.ಮದುವಿ ಆದ ಮ್ಯಾಲ ಜವಾಬ್ದಾರಿ ಮುಗಿತು ಅಂದುಕೊಳ್ಳೊದೆ ತಪ್ಪು ಅನಸ್ತದ. ಮದುವೆ ಮಾಡ್ದ ಮ್ಯಾಲ್ ಜವಾಬ್ದಾರಿ ಹೆಚ್ಚಿಗೆ ಆಗ್ತಾವ ಹೊರತು ಕಮ್ಮಿ ಆಗಲ್ಲ. ನೌಕರಿ ಮಾಡೊ ಹೆಣ್ಣಮಕ್ಳು ಇದ್ರ ಅವರ ಮಕ್ಕಳಿಗೆ ನೊಡಕೊಂಡ್ರ ಅವರಿಗಿ ನೌಕರಿ ಮಾಡಲಕ್ಕ ಸಾದ್ಯ.ಇಲ್ಲಂದ್ರ ಮಕ್ಕಳು ಮನಿ ನೌಕರಿ ಇವೆಲ್ಲ ಹೊಂದಿಸಲಕ್ಕ ಬಡಿದಾಡಿ ಮಾನಸಿಕ ನೆಮ್ಮದಿ ಕಳಕೊಂಡು ಸಂಸಾರದಲ್ಲಿ ಜಗಳ ಸುರು ಆಗತವ. ಹಾಗಂತ ಹೆಣ್ಣುಮಕ್ಕಳು ಬರಿ ಮಕ್ಕಳು ಹಡ್ದು ಮಕ್ಕಳಿಗಿ ಆರೈಕೆ ಮಾಡಕ್ಕೊಂತ ಮನ್ಯಾಗೆ ಇರಬೆಕಂದ್ರೂ ಈಗಿನ ಕಾಲದಾಗ ಅದು ಸಮಂಜಸ ಅನಸಲ್ಲ.ಪ್ರತಿಯೊಬ್ಬ ಹೆಣ್ಣಮಗಳು ಸ್ವಾವಲಂಬಿ ಆಗಿರಬೇಕು.ಹಿಂದಿನ ಕಾಲದಾಗ ಗಂಡು ಹೊರಗ ದುಡಿಬೇಕು ಹೆಂಗಸು ಮನ್ಯಾಗ ದುಡಿಬೇಕು ಎಂಬ ನಿಯಮ ಇತ್ತು.ಈಗಿನ ಕಾಲದಾಗ ಗಂಡನ ದುಡಮೆ ಒಂದೇ ಸಾಕಾಗಲ್ಲ.ಇಬ್ಬರೂ ದುಡಿದ್ರ ಮಾತ್ರ ಆರ್ಥಿಕ ಹೊರೆ ಕಮ್ಮಿ ಆಗತದ. ಅದಕ್ಕ ಈಗಿನ ಜನರೇಷನ್ ನವ್ರು ಮದುವೆನು ಬ್ಯಾಡ ಮಕ್ಳು ಬ್ಯಾಡ ಎಂಬ ನಿರ್ಣಯಕ್ಕ ಬರತಿದ್ದಾರ. ಮದುವೆ ಮಾಡಿಕೊಂಡು ಅವರು ಗಂಡ ಹೆಂಡತಿಯಾಗಿ ಮಕ್ಳು ಹುಟ್ಟಿಸಿ ಅವರಿಗಿ ಬೇಕಾದ ಸವಲತ್ತುಗಳನ್ನು ಕೊಟ್ಟು ತಮ್ಮ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳುವದು ಈಗಿನ ತಲೆಮಾರುಗಳಿಗೆ ಅಷ್ಟು ಸುಲಭ ಅಲ್ಲ. ಗಂಡ ಹೆಂಡತಿ ಎಂಬ ಹೊಂದಾಣಿಕೆ ಕೊರತೆ ಬಾಳ ಅದ.ಇಬ್ಬರೂ ಸ್ವಾವಲಂಬಿ ಗಳು ಇದ್ದರಂತೂ ನಡುವೆ ಸ್ವಾಭಿಮಾನ ತುಸು ಹೆಚ್ಚೆ ಇರತದ. ಹೆತ್ತವರ ಬುದ್ದಿಮಾತು ಕೇಳದಷ್ಟು ಸ್ವನಿರ್ಧಾರ ಮಕ್ಕಳು ತಗೊಳತಾರ. ಸಂಸಾರದಲ್ಲಿ ಎರುಪೇರು ಶುರುವಾದ್ರ ತಪ್ಪು ಯಾರ್ದುಎಂದು ನಿರ್ಣಯ ಕ್ಕ ಬರಲಾರದಂತ ನೆಪಗಳು ಇಬ್ಬರಲ್ಲೂ ಇರತಾವ.ಆಗ ಯಾರಿಗೆ ಬುದ್ದಿ ಹೇಳಬೇಕು..! ಇಂತಹ ಸಂದರ್ಭದಾಗ ಹೆಣ್ಣು ಮಕ್ಕಳಿಗೆ ಬುದ್ದಿ ಹೇಳೊದು ಸಹಜ.ಹೊಂದಿಕೊಂಡು ಹೋಗು , ತಾಳಕೊಂಡು ಹೋಗು , ಗಂಡ ಅಂದ್ರ ಅನಸ್ಕೋಬೇಕು..ಇವೆಲ್ಲವೂ ಹಿಂದಿನಿಂದ ಮಗಳಿಗಿ ಹೇಳೊ ಬುದ್ದಿವಾದಗಳು. ಅಂತಹ ಸಂದರ್ಭದಾಗ ಹೆಣ್ಣಮಗಳಿಗೆ ಬ್ಯಾರೆ ದಾರಿ ಇರಲ್ಲ.ಈ ಕಡಿ ಗಂಡನ ಮನ್ಯಾಗೂ ಇರಲಾರ್ಧ ತವರು ಮನಿಗೂ ಬರಲಾರ್ದ ಸಂದಿಗ್ಧ ಪರಿಸ್ಥಿತಿ ಯೊಳಗ ಆತ್ಮಹತ್ಯೆ ಅಂತಾ ನಿರ್ಧಾರಕ್ಕ ಬಂದು ಬಿಡತಾರ. ಒಬ್ಬ ಹೈಕೋರ್ಟ್ ಜಡ್ಜ ಹೇಳಿದ್ರು ಸಾಯೋ ಮಗಳಿಗಿಂತ ವಿಚ್ಚೇದಿತ ಮಗಳು ಇರಲಿ ಅಂತ.ಕೌಟುಂಬಿಕ ಕಲಹದಿಂದ ಹೆಣ್ಣಮಕ್ಳು ಯಾರ ಸಪೋರ್ಟ್ ಮಾನಸಿಕವಾಗಿ ನೊಂದು  ಸಾಯೊ ಅಂತಾ ನಿರ್ಧಾರ ತಗೊತಾರ.ಆ ನಿರ್ಧಾದ ಅವರ ಮನಸ್ಸಿನಾಗ ಗಟ್ಟಿ ಆಗಲಿಕ್ಕೆ ಬಿಡಲಾರ್ದೆ ತಂದೆ ತಾಯಿಗಳು ನಾವು ಇದ್ದೆವೆ ಎಂಬ ಧೈರ್ಯ ಆದ್ರು ಮಗಳಿಗಿ ಕೊಡಬೇಕು.ಕೊಟ್ಟ ಹೆಣ್ಣು ಕುಲಕ್ಕ ಹೊರಗ ಅಂತ ಅವಳಿಗಿ ಗಂಡನ ಆಸರೆ ಇಲ್ದೆ , ತವರಿನ ಆಸರೆ ಇಲ್ದೆ ಅವಳು ಸಾಯೋ ನಿರ್ಧಾರ ಮಾಡತಾಳ.ಈಗಿನ ಮಕ್ಕಳಿಗೆ ಸಾಯೊ ನಿರ್ಧಾರಕ್ಕ ಬರೊದು ಎಷ್ಟು ಸುಲಭ ಆಗಿಬಿಟ್ಟದ..! ಜೀವನದ ಒಂದಿಷ್ಟು ಕಷ್ಟಗಳು ಸಹಿಸಲಕ್ಕ ಆಗಲ್ಲ ಎಂಬ ಮನಸ್ಥಿತಿ ಗಿ ಬಂದ ಬಿಟ್ಟಾರ. ಸ್ವಲ್ಪ ಕೂಡ ಜೀವನದಾಗ ಏರುಪೇರಾದ್ರೂ ಆತ್ಮಹತ್ಯೆ ಮಾಡ್ಕೋತಾರ.ಈಗಿನ ಮಕ್ಕಳ ಮನಸ್ಥಿತಿ ಅಷ್ಯಾಕ ದುರ್ಬಲ ಆಗಬಿಟ್ಟದ. ಬರಿ ಹೆಣ್ಣಮಕ್ಖೆ ಅಲ್ಲ ಸಂಸಾರದ ಗಲಾಟೆದಾಗ ಗಂಡುಮಕ್ಳು ಕೂಡಾ ಆತ್ಮಹತ್ಯೆ ಮಾಡಕ್ಕೊಳ್ಳತಿದ್ದಾರ.ಹೆಂಡತಿ ಬಿಟ್ಟು ಹೋದ್ಳು ಅಂತಲೋ , ಮತ್ತೊಬ್ಬ್ರರ ಜೋತೆ ಸಂಭಂಧ ಅದ ಅಂತಲೋ  , ಜಗಳ ಆಡ್ತಾಳೆ ಅಂತಲೋ , ಪದೆ ಪದೇ ತವರ ಮನಿಗಿ ಹೋಗತಾಳ ಅಂತಲೋ..ಕ್ಷುಲ್ಲಕ ಕಾರಣಗಳಿಗಿ ಆತ್ಮಹತ್ಯ ಮಾಡಿಕೊಳ್ಳುವ ಗಂಡಸರ ಬಗ್ಗೆ ಕೆಳತಿರತೀವಿ. ಸಂಸಾರದಲ್ಲಿನ ಜಗಳ ಆತ್ಮಹತ್ಯೆ ಯಲ್ಲಿ ಕೊನೆಯಾಗಬೇಕಾ..! ಈಗಿನ ಮದುವೆಗಳು ಎಷ್ಟು ಜಲ್ದಿ ನಿರ್ಣಾಯಕ ಹಂತಕ್ಕ ಬರತಿದ್ದಾವ. ತಪ್ಪು ಯಾರದು ಎಂದು ನಿರ್ಧರಿಸೊದು ಹ್ಯಾಂಗ್. ಅವರವರ ಜಾಗಕ್ಕ ಅವರವರದೆ ಸರಿ .ಎಲ್ಲಿ ತಪ್ಪತಿದ್ದೆವೆ ಎಂದು ತಿಳಕೊಳ್ಳಕ್ಕ ಪ್ರಯತ್ನಿಸುವ ತಾಳ್ಮೆ ಇಬ್ಬರಿಗೂ ಇಬ್ಬರ ಕಡೆಯವರಿಗೂ ಇಲ್ಲ.ಸಾವು ಒಂದೇ ಪರಿಹಾರ ಎಂದು ನಿರ್ಣಯಿಸಿಕೊಂಡವರಿಗೆ ಯಾವ ಉಪದೇಶಗಳು ಕಿವಿಯೊಳಗ ಹೋಗಲ್ಲ. ಇನ್ನೂ ಮದುವೆ ಎನ್ನುವದು ಈಗಿನ ತಲೆಮಾರಿನವರಿಗೆ ಅವಶ್ಯಕ ವಿಷಯ ಅಲ್ಲ.ಹೆತ್ತವ್ರು ಕೂಡ ಮಕ್ಕಳು ಸ್ವಾವಲಂಬಿ ಆಗಿ ದುಡುದು ತಮ್ಮ ತಾವು ನೋಡಕೊಳ್ಳತಾರ ಅನ್ನೊ ಭರವಸೆ ಬರುವವರೆಗೂ ಮಕ್ಕಳ ಮದುವೆಗೆ ಒತ್ತಾಯ ಮಾಡ್ಲೆಬಾರ್ದು.ಹೆಣ್ಣು ಮಕ್ಕಳಿಗಂತೂ ಸ್ವಾವಲಂಬಿ ತನ ಇನ್ನೂ ಅಗತ್ಯ ಅದ. ಗಂಡ ಗಳಿಸಿ ತಂದು ತನ್ನ ಎಲ್ಲಾ ಆಸಿ ಆಕಾಂಕ್ಷೆ ಪೂರಾ ಮಾಡ್ಲಿ ಎಂದು ಬಯಸೋದು ನೀಚತನ.ತನ್ನ ಮತ್ತು ಮಕ್ಕಳ ಜವಾಬ್ದಾರಿ ಗಂಡ ಒಬ್ಬಂದೆ ಅಲ್ಲ.ಮಕ್ಕಳು ಹಡೆದು ಕೊಟ್ಟ ಮಾತ್ರಕ್ಜೆ ತಾನು ಮಹಾನ್ ಅಲ್ಲ ಎಂಬುದು ಪ್ರತಿಯೊಬ್ಬ ಹೆಣ್ಣಮಕ್ಳು ತಿಳಕೋಬೇಕು. ಮದುವೆ ಅಂದ್ರ ಅವಲಂಬನೆ ಅಲ್ಲ.ಒಬ್ಬರಿಗೊಬ್ಬರು ಸಹಕಾರ ನಿಡೋದು.ವರದಕ್ಷಿಣೆ ಎಂಬುದು ಅಂದಿಗೂ ಇಂದಿಗೂ ಚಲಾವಣೆಯಲ್ಲಿ ಇರುವ ವಿಷಯ.ಹೆಣ್ಣು ಕಲತು ನೌಕರಿ ಮಾಡತಿದ್ದರೂ ತವರಿನಿಂದ ಏನಾದ್ರೂ ತರಲಿ ಎಂಬ ಹಂಬಲ ಗಂಡಿನ ಕಡೆಯವ್ರಿಗಿ ಇದ್ದೆ ಇರತದ.ಇದು ಪರೋಕ್ಷವಾಗಿ ಮಾತಿನ ಮುಖಾಂತರ ಬರತಾವ. ಗಂಡ ಅತ್ತೆ ಮಾವ ಈ ವಿಷಯಗಳು ಪದೇ ಪದೇ ಅನ್ನುವದು ಸೊಸೆಗೆ ಸಹಿಸದೆ ಜಗಳ ಶುರು ಆಗತಾವ.ವರದಕ್ಷಿಣೆ ಕಿರುಕುಳದ ಸಾವುಗಳು ಸಾಮಾಜಿಕ ಪಿಡುಗು. ಇದು ದುಡ್ಡಿದ್ದವರಲ್ಲೆ ಹೆಚ್ಚು . ಎಷ್ಟಿದ್ದರೂ ಇನ್ನೂ ಬೇಕು ಎಂಬ ಆಸೆ. ಎಷ್ಟೊಂದು ಧುಮ್ ಧಾಮ್ ಖರ್ಚು ಮಾಡಿ ಮಕ್ಕಳ ಮದುವೆ ಮಾಡ್ತೆವೆ.ಮದುವಿ ಆದಮ್ಯಾಲ್ ಜವಾಬ್ದಾರಿ ಮುಗಿತು ಅಂದುಕೊಳ್ಳದೆ ಮಕ್ಕಳಿಗೆ ಒತ್ತಾಸೆಯಾಗಿ ಇರಬೇಕು.ನಿಮ್ಮ ಜೊತೆಗೆ ನಾವಿದ್ದೆವೆ , ಎಂತಾ ಸಂದರ್ಭದಾಗೂ ನಿಮ್ಮ ಹಿಂದ ನಾವಿದ್ದೆವೆ ಅಂತ ಗಂಡ ಮಕ್ಕಳಿಗೂ ಹೆಣ್ಣು ಮಕ್ಕಳಿಗೂ ದೈರ್ಯ ತುಂಬಬೇಕು. ಈಗಿನ ಪಿಳಿಗೆ ಸ್ವತಂತ್ರ ವಾಗಿ ಇರಬೇಕು ಅಂತ ಅಪೇಕ್ಷೆ ಪಡತಾರ.ಇರಲಿ , ತಂದೆ ತಾಯಿ ಕೂಡ ಮಕ್ಕಳಿಗಿ ಒಜ್ಜಿ ಆಗಲಕ್ಕ ಇಷ್ಟ ಪಡಲ್ಲ. ಮನಿಯೊಳಗ ಅತ್ತಿ ನಾದನಿ ಮಾವ ಇದ್ರ ಅವರ ಜೋಡಿ ಹೊಂದಾಣಿಕಿ ಆಗ್ಧೆ ಜಗಳ ಬರತದ ಅಂದ್ರ ಒಂದು ಕಾರಣ ಅನ್ನಬಹುದು.ಇಷ್ಟ ಪಟ್ಟು ಒಪ್ಪಿ ಮದುವೆ ಮಾಡಿಕೊಂಡು ಗಂಡ ಹೆಂಡತಿ ಇಬ್ರೆ ಇದ್ರು ಜಗಳ ಆಡಿ ಡೈವೊರ್ಸ ಮಾಡ್ಕೋತಾರ..ಆತ್ಮಹತ್ಯೆ ಮಾಡ್ಕೋತಾರ ಅಂದ್ರ ಇದಕ್ಕೆ ಯಾವ ಕಾರಣ ಹುಡಕಬೇಕು..!ಇಲ್ಲಿ ಸಮಸ್ಯೆ ಇರೊದು ಈಗಿನ ಯುವ ಜನರ ವಿಚಾರದಲ್ಲಿ.ತಾಳ್ಮೆಯ ಕೊರತೆ.ಮಕ್ಕಳಿಗಿ ಯಾವ ಕೊರತೆ ಇಲ್ದಂಗ ಬೆಳಸ್ತಿರೊ ತಂದೆ ತಾಯಿಗಳ್ದು ತಪ್ಪು. ಬಿಸಲು ಮಳಿ ಗಾಳಿಗಿ ಹೊಇಗಲಾರದಂಗ ಅವ್ರಿಗಿ ಕಾಪಾಡಿ ಒಂದು ಸರಿ ಅವ್ರು ಇವೆಲ್ಲ ಅನುಭವಿಸೊ ಪರಿಸ್ಥಿತಿ ಬಂದ್ರ ಸಹಿಸಲ್ಲ. ನಾವು ತಂದೆ ತಾಯಿಗಳು ಮಕ್ಕಳ ವಿಷಯವಾಗಿ ಅತೀ (possessive)ಸ್ವಾಮಿತ್ವ ಭಾವನೆ ಹೊಂದತಿದ್ದಿವಿ. ಅವರಿಗಿ ಯಾವ ನಿರ್ಧಾರ ತಗೊಳಕ್ಕ ಬಿಡಲಾರದಂಗ ಅವರಿಗಿ ಕಣ್ಣರೆಪ್ಪೆ ಹಾಂಗ ನೋಡಕೊಂಡು ಅವಲಂಬಿಸಿ ಇರೊಹಂಗ ಮಾಡ್ತಿರೋದು ಕೂಡ ಅವ್ರು ಬದುಕು ಎದುರಿಸಲಿಕ್ಕ ಆಗ್ದೆ ಇರೊದಕ್ಕ ಒಂದು ಕಾರಣ. ಮಕ್ಕಳು ಅಂದ್ರ ನಮ್ಮ ಮೂಲಕ ಈ ಭೂಮಿಗೆ ಬಂದ ಮುಂದಿನ ಪಳೆಯುಳಿಕೆ ಗಳು.ಅವ್ರೆ ನಮ್ಮ ಇಡೀ ಜಗತ್ತು ಅನ್ನೊಹಂಗ ಅವ್ರನ್ನ ಬೆಳೆಸೋದು ಒಂದು ರೀತಿ ಮಕ್ಕಳನ್ನು ದುರ್ಬಲ ಮಾಡ್ಲಿಕ್ಕೆ ಕಾರಣ ಆಗತದ. ಎಷ್ಟೋ ಮಕ್ಳು ತಂದೆ ತಾಯಿಗಿ ಹೊರೆ ಆಗತಾರ.ತಮಗ ಆಸರೆ ಆಗಬೇಕಾದ ಮಕ್ಕಳಗಿ ಜೀವನ ಪರ್ಯಂತ ತಾವೆ ಆಸರೆ ಆಗಬೇಕಾದ ಸಂದರ್ಭಗಳು ಇದ್ದಾವ. ವ್ಯಸನಕ್ಕ ಅಂಟಿಕೊಂಡ ಮಕ್ಕಳಿಗಿ , ಬೇಜವಾಬ್ದಾರಿ ಹೊಂದಿರುವ ಮಕ್ಕಳಿಗಿ ಮದುವೆ ಮಾಡಿದ್ರ ಹಾದಿಗಿ ಬರತಾನ ಅಂತ ಒಂದು ಹೆಣ್ಣು ತಂದು ಕಟ್ಟಿದ್ರ ಒಬ್ಬರ ಜೊತೆ ಮತ್ತೊಬ್ರ ಬದುಕು ಹಾಳು ಮಾಡಿದಂಗ. ಮದುವೆ ಅನ್ನುವದು ಕೇವಲ ಹೊಂದಾಣಿಕೆ ಅಲ್ಲ.ಸಾಂಗತ್ಯ.ಇಬ್ಬರು ಒಬ್ಬರಿಗೊಬ್ಬರು ಆಸರೆ ಆಗಿ ಇರಬೇಕಾದ ಸಂಭಂಧ.ಇದನ್ನು ವಿಜೃಂಭಣೆಯಿಂದ ಹಣ ಖರ್ಚು ಮಾಡಿ ಮಾಡುವದು ಬಿಡುವದು ಅವರವರ ಆಸಕ್ತಿ ಗೆ ಮತ್ತು ಆರ್ಥಿಕ ಸ್ಥಿತಿ ಮ್ಯಾಲ ಅವಲಂಬಿಸ್ತದ. ಅಷ್ಟು ಖರ್ಚು ಮಾಡಿ ಮಾಡಿದ ಮದುವೆ ಗಳ ಜೋಡಿಗಳು ಎಷ್ಟು ಸುಖ ಸಂತೋಷ ದಿಂದ ಜೀವನ ಮಾಡತಿದ್ದಾರ ಅನ್ನೊದು ಇವತ್ತಿನ ಚಿಂತನೆ ವಿಷಯ. ಹಾಗಂತ ಮದುವೆ ಮಾಡೋಧ ಬ್ಯಾಡ ಅಂತಲ್ಲ.ಮೊದಲು ನಮ್ಮ ಮಕ್ಕಳ ಸ್ವಾವಲಂಬಿ ತನ ಮತ್ತು ಅವರು ಸಂಬಂಧಗಳನ್ನು ನಿಭಾಯಿಸುವ ರೀತಿಗಳನ್ನು ನಾವು ಪರಿಕ್ಷಿಸಬೇಕು.ಅದಕ್ಕಾಗಿ ತಯ್ಯಾರಿಸಬೇಕು.ಎಲ್ಲಕ್ಕಿಂತ ಮುಖ್ಯ ಇಬ್ಬರೂ ಆರ್ಥಿಕ ವಾಗಿ ಸ್ವಾವಲಂಬಿ ಗಳಾಗಿರಬೇಕು.ಇದು ಎಲ್ಲಕ್ಕಿಂತ ಮುಖ್ಯ. ಮಕ್ಕಳು ಹರೆಯಕ್ಕ ಬರುತ್ತಲೆ ಮದುವೆ ಮಾಡಲಕ್ಕ ಇಲ್ಲ ಮದುವೆ ಆಗಲಿಕ್ಕ ಒತ್ತಾಯಿಸುವ ಹೆತ್ತವರು ಮೊದಲು ಅರ್ಥ ಮಾಡಕೊಬೇಕು..ನಮ್ಮ ಮಕ್ಕಳು ಮದುವೆ ಅನ್ನೊ ಸಂಭಂಧ ನಿಭಾಯಿಸಲಕ್ಕ ಎಷ್ಟು ತಯ್ಯಾರಿದ್ದಾರ ಅನ್ನುವ ವಿಷಯ.ನಮ್ಮ ದೇಶದಲ್ಲಿ ಮದುವೆಗೆ ಇದ್ದಷ್ಟು ಪ್ರಾಮುಖ್ಯತೆ , ಮದುವೆ ನಂತರ ಬರುವ ಸಮಸ್ಯೆ ಗಳಿಗೆ ಇಲ್ಲ. ಗಂಡ ಹೆಂಡತಿ ಅಂದ ಮ್ಯಾಲ ಇವೆಲ್ಲ ಸಾಮಾನ್ಯ. ಮಕ್ಕಳು ಆದ ಮ್ಯಾಲ್ ಇನ್ನೆಂತ ಜಗಳ , ಅಂತ ಸಮಸ್ಯೆ ಗಳನ್ನು ದೂರ ಮಾಡಲು ನೊಇಡತೀವಿ.ಇವುಗಳನ್ನು ಚಿಕ್ಕ ಸಮಸ್ಯೆ ಅಂತ ನೋಡ್ದೆ ಇಂತಹ ಸಂದರ್ಭಗಳಲ್ಲಿ ಮಕ್ಕಳಿಗೆ ಆಸರೆ ಆಗಿ ನಿಲ್ಲಬೆಕಾದ್ದು ಹೆತ್ತವರ ಕರ್ತವ್ಯ. pic:AIcreated ಜ್ಯೋತಿ ಡಿ ಬೊಮ್ಮಾ ಅವರುಕಲಬುರ್ಗಿ ಜಿಲ್ಲೆಯವರು.ಇವರು ಇದುವರೆಗುನಾಲ್ಕು ಕವನ ಸಂಕಲನಗಳನ್ನು ಎರಡು ಪ್ರಬಂಧ ಸಂಕಲನಗಳನ್ನುಪ್ರಕಟಿಸಿದ್ದಾರೆ. ಸಂಗಾತಿಪತ್ರಿಕೆಗಾಗಿಯೇ ಇವರು ದೇಸಿ ನುಡಿಗಟ್ಟಿನಲ್ಲಿ ವಿಶಿಷ್ಠ, ವಿಶೇಷ ವಿಷಯಗಳ ಬಗ್ಗೆ ಪ್ರತಿ ತಿಂಗಳೂ ಬರೆಯುತ್ತಿದ್ದಾರೆ

Read Post »

You cannot copy content of this page

Scroll to Top