ಅಂಕಣ ಸಂಗಾತಿ
ಸಕಾಲ
ನಿರ್ಲಿಪ್ತ-ನಿರ್ಭಾವುಕತೆಯ ಅವಿನಾಭಾವ ಸಂಬಂಧ.
ಅಂಕಣ ಸಂಗಾತಿ
ಸಕಾಲ
ನಿರ್ಲಿಪ್ತ-ನಿರ್ಭಾವುಕತೆಯ ಅವಿನಾಭಾವ ಸಂಬಂಧ.
ಹೊಸ ಅಂಕಣ ಧಮ್ಮಲಾಲ್ ಛೋಪ್ರಾ ತೆಲುಗು ಮೂಲ : ಮಧುರಾಂತಕಂ ನರೇಂದ್ರಕನ್ನಡಕ್ಕೆ : ಕುಂ. ವೀರಭದ್ರಪ್ಪಪ್ರ : ಆಕೃತಿ ಪುಸ್ತಕ, ಬೆಂಗಳೂರುಪ್ರಕಟಣೆಯ ರ್ಷ : ೨೦೧೭ಬೆಲೆ : ರೂ.೧೦೦ಪುಟಗಳು : ೧೧೨ ವಿಶಿಷ್ಟ ಕಥಾವಸ್ತು, ತಂತ್ರ ಮತ್ತು ವಿನ್ಯಾಸಗಳಿರುವ ಈ ಕಾದಂಬರಿಯಲ್ಲಿ ನಡೆಯುವ ಹೆಚ್ಚಿನೆಲ್ಲ ಘಟನೆಗಳು ಮತ್ತು ಪಾತ್ರಗಳು ಎದುರಾಗುವ ಸನ್ನಿವೇಶಗಳು ಆಮ್ಸ್ಟರ್ಡಾಂ ನಗರದ ವಿಮಾನ ನಿಲ್ದಾಣದಲ್ಲಿ ನಡೆಯುತ್ತವೆ . ಕಥೆಯ ನಿರೂಪಕ ವಿಚಿತ್ರ ಹೆಸರಿನ ಗರ್ರಂಕೊಂಡ ಗರ್ರಂ ಪುರೌತು. ಜೈಸಲ್ಮೇರ್ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕ. ಆತ ಮೆಕ್ಸಿಕೋದಲ್ಲಿ ನಡೆಯುವ ಒಂದು ವಿಚಾರಸಂಕಿರಣದಲ್ಲಿ ಭಾಗವಹಿಸಲು ಹೊರಟಿದ್ದಾನೆ. ಮೊದಲ ಬಾರಿ ವಿದೇಶ ಪ್ರಯಾಣ ಮಾಡುತ್ತಿರುವುದರಿಂದ ತನಗೆ ಅಲ್ಲಿಗೆ ಹೋಗುವ ಯಾರಾದರೂ ಇನ್ನೊಬ್ಬರು ಪ್ರಯಾಣಿಕರ ಜತೆಗೆ ಟಿಕೆಟ್ ಮಾಡಿಸಬೇಕೆಂದು ಏಜೆಂಟರಲ್ಲಿ ಕೇಳಿಕೊಂಡ ಪ್ರಕಾರ ಆತನಿಗೆ ಸಿಗುವ ಜತೆಗಾರ ಅತಿ ವಿಚಿತ್ರ ಸ್ವಭಾವದ ಧಮ್ಮಲಾಲ್ ಛೋಪ್ರಾ. ಅವನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕನಲ್ಲ. ಒಬ್ಬ ವ್ಯಾಪಾರಿ. ಸ್ವಂತ ಆಸಕ್ತಿಯಿಂದ ಎಂ.ಬಿ.ಎ.ಕಲಿತು ಸಂಶೋಧನೆ ಮಾಡಿ ಪಿ.ಹೆಚ್.ಡಿ.ಪಡೆದವನು. ಆದರೆ ಆತ ಆರಂಭದಿಂದಲೂ ಬಹಳ ವಿಚಿತ್ರವಾಗಿ ಮಾತನಾಡುವುದನ್ನು ನಿರೂಪಕ ಗಮನಿಸುತ್ತಾನೆ. ಇಂಗ್ಲಿಷ್ ಸರಿಯಾಗಿ ಗೊತ್ತಿಲ್ಲದ ಅವನು ಹಿಂದಿಯಲ್ಲೇ ಸಂಭಾಷಿಸುತ್ತಾನೆ. ಹಿಂದಿ ಸರಿಯಾಗಿ ಮಾತನಾಡಲಾಗದ ತೆಲುಗಿನವನಾದ ನಿರೂಪಕ ಇಂಗ್ಲಿಷ್ ಮತ್ತು ಹಿಂದಿ ಬೆರೆಸಿ ಹೇಗೋ ನಿಭಾಯಿಸುತ್ತಾನೆ. ಆಮ್ಸ್ಟರ್ಡಾಂನಲ್ಲಿ ಅದ್ಭುತಗಳು ಸಂಭವಿಸುತ್ತವೆ, ನೋಡುತ್ತಿರಿ’ ಎನ್ನುವ ಧಮ್ಮಲಾಲ್ ಛೋಪ್ರಾ ತನಲ್ಲಿ ಇದೆಲ್ಲವನ್ನೂ ಮುಂದಾಗಿ ತಿಳಿಸುವ ಆರನೇ ಇಂದ್ರಿಯ ಸಕ್ರಿಯವಾಗಿದೆ ಎನ್ನುತ್ತಾನೆ. ಆಮ್ಸ್ಟರ್ ನದಿಗೆ ಕಟ್ಟಿದ ಅಣೆಕಟ್ಟಿನ ನಗರಿ ಆಮ್ಸ್ಟg ಡಾಂನಲ್ಲಿ ಜಲದಿಗ್ಭಂಧನದಲ್ಲಿ ನಾವು ಸಿಲುಕಲಿದ್ದೇವೆ’ ಅನ್ನುತ್ತಾನೆ . ಹುಚ್ಚನಂತೆ ಏನೇನೋ ಬಡಬಡಿಸುವ ಆತನ ಮಾತುಗಳು ನಿರೂಪಕನನ್ನು ಗೊಂದಲಕ್ಕೀಡು ಮಾಡುತ್ತವೆ. ಮೆಕ್ಸಿಕೋದಲ್ಲಿ ಎಂಟು ದಿನಗಳ ಕಾಲ ಕಳೆದು ದೆಹಲಿಗೆ ಮರಳಿ ಬರುತ್ತಾ ಆಮ್ಸ್ಟರ್ಡಾಂನಲ್ಲಿ ಅವರು ೨೪ ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಕಳೆಯಬೇಕಾಗುತ್ತದೆ. ಅಲ್ಲಿ ಅವರಿಗೆ ವಿಚಿತ್ರ ಅನುಭವಗಳಾಗುತ್ತವೆ. ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕರು ಇಡುವ ಬಾಂಬುಗಳುಂಟು ಮಾಡಿದ ಅನಾಹುತಗಳಿಂದ ಆತಂಕಗೊಂಡ ಅಧಿಕಾರಿಗಳು ಪ್ರತಿಯೊಬ್ಬ ಪ್ರಯಾಣಿಕರನ್ನೂ ಅನುಮಾನದ ದೃಷ್ಟಿಯಿಂದಲೇ ನೋಡುತ್ತಾರೆ. ಸೆಕ್ಯೂರಿಟಿಗಳು ಭದ್ರತೆಯ ಬಿಗಿಯನ್ನು ಹೆಚ್ಚಿಸಿ ಅನಗತ್ಯ ಪ್ರಶ್ನೆಗಳಿಂದ ಅವರನ್ನು ಮಾನಸಿಕ ಹಿಂಸೆಗೆ ಗುರಿ ಪಡಿಸುತ್ತಾರೆ. ತಿನ್ನಲು ಸರಿಯಾದ ಆಹಾರವಿಲ್ಲದೆ, ಕುಡಿಯಲು ನೀರಿಲ್ಲದೆ ಅವರು ಬಳಲುತ್ತಾರೆ. ಅವರನ್ನು ಸೇರಿಸಿಕೊಂಡ ಹೋಟೆಲಿನೊಳಗಿನ ವಾತಾವರಣ ಭಯಜನಕವಾಗಿರುತ್ತದೆ. ಅವರು ಹೊಕ್ಕು ಬರುವ ಕತ್ತಲ ಲೋಕ ಇಡಿಯ ಜಗತ್ತನ್ನು ತುಂಬಿರುವ ಸಂರ್ಷದ ಯಾತನೆಯನ್ನು ಪ್ರತಿಬಿಂಬಿಸುತ್ತದೆ. ಕೊನೆಯ ತನಕವೂ ಛೋಪ್ರಾ ತಾನೊಬ್ಬ ಆಧ್ಯಾತ್ಮಿಕ ಗುರು ಎಂಬಂತೆ ರ್ತಿಸುತ್ತಾನೆ. ಆದರೆ ನಿರೂಪಕ ಅದನ್ನು ನಂಬುವುದಿಲ್ಲ. ಈ ಕಾದಂಬರಿ ಆಧುನಿಕ ಜಗತ್ತಿನ ಸ್ಥಿತಿಗೆ ಹಿಡಿದ ಕನ್ನಡಿಯಂತಿದೆ. ಅನುವಾದದ ಭಾಷೆ ಪ್ರಬುದ್ಧವಾಗಿದೆ ******************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ
ಅಂಕಣ ಬರಹ ಕರುಳು ಹಿಂಡುವ ಬಡಪಾಯಿಯೊಬ್ಬನ ಕರುಣ ಕಥೆ ‘ಆಡು ಜೀವನ’ ‘ಆಡು ಜೀವನ’ಮೂಲ : ಬೆನ್ಯಾಮಿನ್ಕನ್ನಡಕ್ಕೆ : ಡಾ.ಅಶೋಕ ಕುಮಾರ್ಪ್ರಕಾಶಕರು : ಹೇಮಂತ ಸಾಹಿತ್ಯಪ್ರಕಟಣೆಯ ವರ್ಷ: ೨೦೧೨ಬೆಲೆ : ರೂ.೧೦೦ಪುಟಗಳು : ೧೮೪ ಬಡತನದ ಬೇಗೆಯನ್ನು ತಾಳಲಾರದೆ ಉತ್ತಮ ಭವಿಷ್ಯದ ಕನಸು ಕಾಣುತ್ತ ಕೊಲ್ಲಿ ರಾಷ್ಟçಕ್ಕೆ ಹೋಗಿ ಅಲ್ಲೂ ದುರಾದೃಷ್ಟದ ಅನಿರೀಕ್ಷಿತ ಹೊಡೆತದಿಂದ ಅಸಹನೀಯ ವೇದನೆಯನ್ನನುಭವಿಸಿದ ಬಡಪಾಯಿಯ ಕರುಣ ಕತೆ ‘ಆಡು ಜೀವನ’. ಅಶಿಕ್ಷಿತನಾದ ಆತನ ಬಾಯಿಯಿಂದ ಕೇಳಿದ ಕತೆಗೆ ಲೇಖಕ ಬೆನ್ಯಾಮಿನ್ ಅವರು ಕಾದಂಬರಿಯ ರೂಪ ಕೊಟ್ಟಿದ್ದಾರೆ. ಈ ಕಾದಂಬರಿಯು ಬೆನ್ಯಾಮಿನ್ ಅವರಿಗೆ ಅಪಾರ ಜನಪ್ರಿಯತೆ – ಕೀರ್ತಿಗಳನ್ನು ತಂದು ಕೊಟ್ಟಿದೆ. ಕೇರಳದಲ್ಲಿ ಮರಳುಗಾರಿಕೆಯ ಕಾರ್ಮಿಕನಾಗಿ ದುಡಿಯುತ್ತಿದ್ದ ನಜೀಬ್ ಎಂಬ ಬಡ ಯುವಕ, ತನ್ನ ಸ್ನೇಹಿತನ ಸಂಬಂಧಿಯ ಮೂಲಕ ಸಿಕ್ಕಿದ ವೀಸಾದ ಸಹಾಯದಿಂದ ಸಂಪಾದನೆ ಮಾಡುವ ಕನಸು ಕಾಣುತ್ತ ಸೌದಿ ಅರೇಬಿಯಕ್ಕೆ ಹೊಗುತ್ತಾನೆ. ಅವನ ಜತೆಗೆ ಅಲ್ಲಿಗೆ ಹೋಗಲು ಆಗಲೇ ವೀಸಾ ಪಡೆದುಕೊಂಡಿದ್ದ ಹಕೀಮ್ ಎಂಬ ಜತೆಗಾರನೂ ಸಿಗುತ್ತಾನೆ. ರಿಯಾದ್ನಲ್ಲಿ ವಿಮಾನದಿಂದಿಳಿದ ಅವರಿಬ್ಬರೂ ವಿಮಾನ ನಿಲ್ದಾಣದಲ್ಲಿ ಯಾರಿಗಾಗಿಯೋ ಕಾಯುತ್ತಿರುವಂತೆ ಕಂಡ ಅರಬಿಯನ್ನು ಕಂಡು ಆತನೇ ತಮ್ಮನ್ನು ಸ್ಪಾನ್ಸರ್ ಮಾಡಿದ ವ್ಯಕ್ತಿಯೆಂದು ತಪ್ಪಾಗಿ ತಿಳಿಯುತ್ತಾರೆ. ಭಾಷೆ ಗೊತ್ತಿಲ್ಲದ್ದರಿಂದ ಸಂವಹನ ಮಾಡಲಾಗದೆ ಇಬ್ಬರೂ ಆ ಅರಾಬ್ ( ಸಾಹುಕಾರ) ಜತೆಗೆ ಹೋಗಿಯೇ ಬಿಡುತ್ತಾರೆ. ಆದರೆ ಅವರು ಹೋಗಿ ತಲುಪಿದ್ದು ಎರಡು ಭಿನ್ನ ‘ಮಸ್ರಾ’( ತೋಟ) ಗಳಿಗಾಗಿತ್ತು. ತೀರಾ ದುರ್ಗಂಧಗಳಿಂದ ತುಂಬಿದ್ದ ಕೊಳಕು ಪರಿಸರದಲ್ಲಿ ಅವರಿಬ್ಬರೂ ಬೇರೆ ಬೇರೆ ಪ್ರದೇಶಗಳಲ್ಲಿ ಆಡುಗಳನ್ನೂ ಒಂಟೆಗಳನ್ನೂ ನೋಡಿಕೊಳ್ಳುವ ಕೆಲಸ ಮಾಡ ಬೇಕಾಗಿತ್ತು. ಕ್ರೂರ ಅರಬಾಬ್ ಅವರನ್ನು ಕತ್ತೆಗಳಂತೆ ದುಡಿಸಿಕೊಂಡು, ವಿರೋಧಿಸಿದರೆ ಹೊಡೆದು ಬಡಿದು ಮಾಡಿ ಶೋಷಿಸುತ್ತಾನೆ. ನಜೀಬ್ ಅಲ್ಲಿಗೆ ಹೋದಾಗ ಅಲ್ಲಿ ಇನ್ನೊಬ್ಬ ಕೆಲಸಗಾರನೂ ಇದ್ದ. ವರ್ಷಗಟ್ಟಲೆ ಧೀರ್ಘ ಕಾಲದ ಗುಲಾಮಗಿರಿಯು ಅವನನ್ನು ಒಂದು ಭೀಕರ ರೂಪಿಯನ್ನಾಗಿ ಮಾಡಿತ್ತು. ನಜೀಬ್ ಬಂದು ಕೆಲವು ಕಾಲವಾದ ನಂತರ ಅವನು ಕಾಣದಾದ. ಮುಂದೆ ಮಸ್ರಾದ ಎಲ್ಲ ಕೆಲಸಗಳೂ ನಜೀಬ್ನ ಮೇಲೆ ಬಿದ್ದವು. ಭಾಷೆಯೂ ಗೊತ್ತಿಲ್ಲದೆ ಅವನು ಏಕಾಂಗಿಯಾಗಿ ದಿನಗಳನ್ನು ಕಷ್ಟದಿಂದ ಕಳೆಯುತ್ತಾನೆ. ಹಸಿಹಾಲು ಮತ್ತು ಕುಬೂಸ್ ಅನ್ನುವ ಅರಬಿ ರೊಟ್ಟಿಯೂ ಸ್ವಲ್ಪವೇ ಸ್ವಲ್ಪ ನೀರೂ ಆಗಿದ್ದವು ಅವನಿಗೆ ಸಿಕ್ಕುತ್ತಿದ್ದ ಆಹಾರ.. ವಾಸಿಸಲು ಕೋಣೆಯಾಗಲಿ, ಸ್ನಾನಕ್ಕಾಗಲಿ, ಬದಲಿಸಲು ಬಟ್ಟೆಯಾಗಲಿ ಏನೂ ಸಿಗದ ಪರಿಸ್ಥಿತಿಯಲ್ಲಿ ಅವನ ಸ್ಥಿತಿ ಮೃಗಗಳಿಗಿಂತ ಕಡೆಯಾಗಿತ್ತು. ಹೆಚ್ಚು ದೂರವಿಲ್ಲದ ಇನ್ನೊಂದು ಮಸ್ರಾದಲ್ಲಿ ಅಂಥದೇ ಸ್ಥಿತಿಯಲ್ಲಿದ್ದ ಹಕೀಮನನ್ನು ನಜೀಬ್ ಕೆಲವೊಮ್ಮೆ ಭೇಟಿಯಾಗಲು ಹೋಗುವುದನ್ನು ಅರಬಾಬ್ ಯಾವಾಗಲೂ ತಡೆಯುತ್ತಿದ್ದ. ಆಡುಗಳಿಗೆ ಊರಿನ ಕಥಾಪಾತ್ರಗಳನ್ನೂ ತನ್ನವರ ಹೆಸರುಗಳನ್ನೂ ಇಟ್ಟು ಅವುಗಳೊಂದಿಗೆ ಮಾತನಾಡುತ್ತ ನಜೀಬ್ ತನ್ನ ಒಂಟಿತನದ ನೋವಿಗೆ ಸಮಾಧಾನ ಹೇಳಿಕೊಳ್ಳುತ್ತಾನೆ. ಈ ನಡುವೆ ಹಕೀಮ್ ಕೆಲಸ ಮಾಡುತ್ತಿದ್ದ ಮಸ್ರಾದಲ್ಲಿ ಇಬ್ರಾಹಿಮ್ ಖಾದರಿ ಎಂಬ ಸೋಮಾಲಿಯದ ಒಬ್ಬ ಪ್ರಜೆ ಕೂಡಾ ಕೆಲಸಕ್ಕೆ ಸೇರುತ್ತಾನೆ. ಹೇಗಾದರೂ ತಪ್ಪಿಸಿಕೊಂಡು ಹೋಗಬೇಕೆಂದು ಅವಕಾಶಕ್ಕಾಗಿ ಎದುರು ನೋಡುತ್ತಿದ್ದ ಹಕೀಮ್ , ಖಾದರಿ ಮತ್ತು ನಜೀಬರಿಗೆ ಒಂದು ಸಣ್ಣ ಸಂಧರ್ಭವೊದಗಿ ಬರುತ್ತದೆ. ಮಸ್ರಾದ ಅರಬಾಬ್ ತನ್ನ ಸಂಬಂಧಿಕರ ಮಗಳ ಮದುವೆಯ ಕೆಲಸಗಳಿಗೆ ಹೋಗುತ್ತಿದ್ದ ಅವಕಾಶವನ್ನು ಬಳಸಿಕೊಂಡು ಅವರು ತಪ್ಪಿಸಿಕೊಂಡು ಓಡತೊಡಗುತ್ತಾರೆ. ಮರುಭೂಮಿಯಲ್ಲಿ ಧೀರ್ಘ ದೂರದ ತನಕ ಓಡಿ ಓಡಿ, ಹಸಿವು ನೀರಡಿಕೆಗಳಿಂದ ಹೈರಾಣಾದ ಅವರಿಗೆ ಒಂದೆಡೆ ದಾರಿಯೂ ತಪ್ಪಿ ಹೋಗುತ್ತದೆ. ಓಟದ ನಡುವೆ ಹಕೀಮ್ ದಾಹ ತಡೆಯಲಾರದೆ ಸಾಯುತ್ತಾನೆ. ಮುಂದೆ ಖಾದರ್-ನಜೀಬರಿಗೆ ಒಂದು ಓಯಸಿಸ್ ಕಾಣಸಿಕ್ಕಿ ಅಲ್ಲಿ ದಾಹ ತೀರಿಸಿಕೊಂಡು ಅವರು ಓಟ ಮುಂದುವರೆಸುತ್ತಾರೆ. ಕೊನೆಗೆ ಒಂದು ಹೈವೇಗೆ ಬಂದು ತಲುಪುವಷ್ಟರಲ್ಲಿ ಇಬ್ರಾಹಿಮ್ ಕೂಡಾ ಕಾಣೆಯಾಗಿರುತ್ತಾನೆ. ಹೈವೇಯಲ್ಲಿ ಒಬ್ಬ ಸಭ್ಯ ಅರಬಿ ನಜೀಬ್ನನ್ನು ತನ್ನ ಕಾರಿನಲ್ಲಿ ಹತ್ತಿಸಿಕೊಂಡು ಮುಂದಿನ ಪಟ್ಟಣವಾದ ರಿಯಾದ್ನ ಬತ್ಹಕ್ಕೆ ತಲುಪಿಸುತ್ತಾನೆ. ಬತ್ಹ ತಲುಪಿದ ನಜೀಬ್ ಕುಞಕ್ಕ ಎಂಬವನಲ್ಲಿ ಚಾಕರಿಗೆ ನಿಂತು ಧೀರ್ಘ ಕಾಲದ ಬಳಿಕ ತನ್ನ ಹಿಂದಿನ ಮನುಷ್ಯರೂಪ ಮತ್ತು ಆರೋಗ್ಯವನ್ನು ಮರಳಿ ಪಡೆಯುತ್ತಾನೆ. ಊರಿಗೆ ಹಿಂದಿರುಗಲು ಪೋಲಿಸರಿಗೆ ವಿಷಯ ತಿಳಿಸಲಾಗುತ್ತದೆ. ಹಾಗೆ ಷುಮೇಸಿಯ ಸೆರೆಮನೆಯಲ್ಲಿ ಕೆಲವು ತಿಂಗಳುಗಳು ಕಳೆದ ನಂತರ ಒಂದು ದಿನ ನಜೀಬನ ಅರಬಾಬ್ ಕಳೆದು ಹೋದ ತನ್ನ ಗುಲಾಮರನ್ನು ಅರಸಿಕೊಂಡು ಬರುತ್ತಾನಾದರೂ ನಜೀಬನನ್ನು ಹಿಡಿದೊಯ್ಯುವುದಿಲ್ಲ, ಯಾಕೆಂದರೆ ಅವನ ವೀಸಾದಲ್ಲಿದ್ದ ವ್ಯಕ್ತಿ ನಜೀಬ್ ಆಗಿರಲಿಲ್ಲ. ಮುಂದೆ ಭಾರತೀಯ ದೂತಾವಾಸವು ಕೊಟ್ಟ ಔಟ್ ಪಾಸಿನ ಮೂಲಕ ನಜೀಬ ಊರಿಗೆ ತಲುಪುತ್ತಾನೆ. ವ್ಯಕ್ತಿಯೊಬ್ಬನ ನಿಜ ಅನುಭವವನ್ನು ಆಧರಿಸಿ ಬರೆದದ್ದಾದರೂ ಇದು ಬರೇ ಒಂದು ಜೀವನ ಕಥೆಯಲ್ಲ. ಕಾದಂಬರಿಯ ನಜೀಬ ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲೂ ಬದುಕನ್ನು ಮುಂದುವರಿಸಬೇಕೆಂಬ ಇಚ್ಛಾಶಕ್ತಿ ಇದ್ದವನಾಗಿದ್ದರೆ ನಿಜ ಬದುಕಿನ ನಜೀಬ್ ಮರುಭೂಮಿಯಲ್ಲಿದ್ದಾಗ ಹಲವು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದವನೇ ಆಗಿದ್ದ. ಬದುಕಿನ ಬಗ್ಗೆ ಜುಗುಪ್ಸೆ ಹೊಂದಿದ್ದ. ರಿಯಾದಿನಲ್ಲಿ ಕಾಲೂರಿದ ದಿವಸದಿಂದ ಕಾದಂಬರಿಯಲ್ಲಿ ನಮೂದಿಸಿರುವ ೧೯೯೨ ಏಪ್ರಿಲ್ ೪ರಂದೇ ತಾನು ಅಲ್ಲಿಗೆ ಹೋಗಿ ತನ್ನ ವಲಸೆ ಬದುಕನ್ನು ಆರಂಭಿಸಿದ್ದೆಂದೂ ಲೇಖಕರು ಹೇಳುತ್ತಾರೆ. ಸೊಗಸಾದ ನಿರೂಪಣೆ, ಓದುಗರ ಕಣ್ಣುಗಳನ್ನು ಹನಿಗೂಡಿಸುವ ಸಂಕಟ ಮತ್ತು ಸಂಕಷ್ಟಗಳ ವಿವರಗಳು, ಅನುಭವ ಸಾಂದ್ರವಾದ ಕಥಾವಸ್ತು, ತನಿಮಲೆಯಾಳದ ಸೊಗಡುಗಳು ಮೇಳೈಸಿ ನಿಂತ ಕಾದಂಬರಿ ಇದು. ಡಾ.ಅಶೋಕ ಕುಮಾರ್ ಅವರ ಅನುವಾದ ಮೂಲಕ್ಕೆ ನಿಷ್ಠವಾಗಿದೆ. ******************************************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ
ಪುಸ್ತಕ ಸಂಗಾತಿ ಗಾಯಗೊಂಡ ಹೃದಯದ ಸ್ವಗತ ಗಾಯಗೊಂಡ ಹೃದಯದ ಸ್ವಗತತೆಲುಗು ಮೂಲ : ಅಯಿನಂಪೂಡಿ ಶ್ರೀಲಕ್ಷ್ಮಿ ಕನ್ನಡಕ್ಕೆ : ರೋಹಿಣಿ ಸತ್ಯಪ್ರ : ಸ್ನೇಹ ಬುಕ್ ಹೌಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೭೦ಪುಟಗಳು : ೬೪ ಇದು ಒಂದು ನೀಳ್ಗವನ. ತನ್ನ ಗೃಹಕೃತ್ಯದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಶ್ರದ್ಧೆಯಿಂದ ನೆರವೇರಿಸುತ್ತಿದ್ದ ಗೃಹಿಣಿಯೊಬ್ಬಳು ಸ್ತನದ ಕ್ಯಾನ್ಸರಿನಿಂದ ಬಳಲಿ ಚಿಕಿತ್ಸೆಯ ಅನೇಕ ಯಾತನಾಪೂರ್ಣ ಹಂತಗಳನ್ನು ದಾಟಿ, ಧೈರ್ಯ ಮತ್ತು ಆತ್ಮವಿಶ್ವಾಸಗಳಿಂದ ಸಾವನ್ನು ಗೆಲ್ಲುವುದು ಈ ಕವಿತೆಯ ವಸ್ತು. ಇದು ಕವಯಿತ್ರಿ ಅಯಿನಂಪೂಡಿ ಶ್ರೀಲಕ್ಷ್ಮಿಯವರ ನಿಜ ಕಥೆಯೂ ಹೌದು. ಕವನದ ಉದ್ದಕ್ಕೂ ನಾವು ನಿರೂಪಕಿಯ ಬದುಕು ಹಾಗೂ ಆಕೆಯ ವ್ಯಕ್ತಿತ್ವದ ವಿವಿಧ ಮುಖಗಳನ್ನು ನೋಡುತ್ತ ಹೋಗುತ್ತೇವೆ. ಒಟ್ಟಿನಲ್ಲಿ ಇದು ಓದುಗನ ಮನಸ್ಸನ್ನು ಶುದ್ಧೀಕರಣಕ್ಕೊಳಗಾಗಿಸುವ ಕೆಥಾರ್ಸಿಸ್ ಪರಿಣಾಮವಿರುವ ಕಾವ್ಯ. ಇದು ಒಂದು ಸ್ವಗತದ ನಿರೂಪಣೆಯಾದರೂ ಸ್ತ್ರೀಯ ಅಗಾಧವಾದ ಜೀವ ಚೈತನ್ಯ ಮತ್ತು ಧಾರಣ ಶಕ್ತಿಗಳಿಗೆ ಬರೆದ ಭಾಷ್ಯವೇ ಆಗಿದೆ ಅನ್ನಬಹುದು. ಕ್ಯಾನ್ಸರ್ ಅನ್ನುವುದು ಎಲ್ಲರೂ ಹೆದರಿ ನಡುಗುವ ಒಂದು ಭಯಾನಕ ಕಾಯಿಲೆ. ಬದುಕಿನ ಬಗೆಗಿನ ಭರವಸೆಗಳನ್ನೆಲ್ಲ ಬುಡಮೇಲು ಮಾಡಿ ವ್ಯಕ್ತಿಯನ್ನು ಭಯ-ತಲ್ಲಣಗಳ ಅಂಚಿಗೆ ದೂಡುವ ಒಂದು ಮಹಾಮಾರಿ. ಆದರೆ ಇಲ್ಲಿನ ಕಥಾನಾಯಕಿ ಸಾಮಾನ್ಯಳಲ್ಲ. ಇಂಥ ಒಂದು ಗದಗುಟ್ಟಿಸುವ ಸನ್ನಿವೇಶ ಎದುರಾದಾಗಲೂ ಅದನ್ನು ಆಕೆ ಲೀಲಾಜಾಲವಾಗಿ ಮುಗುಳ್ನಗೆಯೊಂದಿಗೆ ಅತ್ಯಂತ ಸಹಜವಾಗಿ ನಿಭಾಯಿಸುತ್ತಾಳೆ. ಮನಸ್ಸಿನ ತುಂಬಾ ಕೋಲಾಹಲವೇ ಆದರೂ ಅದನ್ನು ತನ್ನೊಳಗೇ ಪರಿಹರಿಸಿಕೊಳ್ಳುತ್ತ, ಹೊರಗೆ ತೋರಗೊಡದೇ ಇರುವುದರಲ್ಲಿ ಆಕೆ ಯಶಸ್ವಿಯಾಗುತ್ತಾಳೆ. ಯಾಕೆಂದರೆ ಇದೆಲ್ಲವನ್ನೂ ತಾನು ಒಂದು ದಿನ ಗೆದ್ದೇ ಗೆಲ್ಲುತ್ತೇನೆಂಬ ದೃಢವಾದ ನಂಬಿಕೆ ಅವಳಲ್ಲಿದೆ. ಈ ನೀಳ್ಗವನವನ್ನು ಪ್ರೋಲಾಗ್, ಇಂಟ್ರೋ, ಸ್ಟೇಜ್ ೧, ಸ್ಟೇಜ್ ೨, ಸ್ಟೇಜ್ ೩, ಫ್ಲಾಷ್ಬಾಕ್, ಫ್ಲಾಷ್ ಪ್ರೆಸೆಂಟ್, ಇನ್ ದ ಥಿಯೇಟರ್, ಪಿಂಕ್ ಹೋಪ್, ಮರಣಾಮರಣ-ಎಂದು ಒಂದು ಪಾಶ್ಚಾತ್ಯ ಪ್ರಾಚೀನ ನಾಟಕದ ರೂಪದಲ್ಲಿ ವಿಭಾಗಿಸಲಾಗಿದೆ. ಪ್ರಾಯಶಃ ಬದುಕು ಆಕಸ್ಮಿಕ ಸನ್ನಿವೇಶಗಳ ನಾಟಕವೆಂಬ ಕವಯಿತ್ರಿಯ ಧೋರಣೆ ಇದಕ್ಕೆ ಕಾರಣವಾಗಿರಬಹುದು. ಕವಯಿತ್ರಿ ತನ್ನ ನೋವುಗಳನ್ನೂ ಭಾವನಾತ್ಮಕ ಸಂವೇದನೆಗಳನ್ನೂ ತಾತ್ವಿಕ ಚಿಂತನೆಗಳನ್ನೂ ಇಲ್ಲಿ ಸುಂದರವಾದ ಭಾಷೆಯಲ್ಲಿ ಕಟ್ಟಿಕೊಟ್ಟಿದ್ದಾರೆ. ಅನುವಾದದ ಶೈಲಿಯೂ ಅಷ್ಟೇ ಕಾವ್ಯಾತ್ಮಕವಾಗಿದ್ದು ಸಹಜವಾಗಿ ಓದಿಸಿಕೊಂಡು ಹೋಗುತ್ತದೆ. ಆರಂಭದಲ್ಲಿ ಎಂ.ಎಸ್.ಆಶಾದೇವಿಯವರ ಸೊಗಸಾದ ವಿಮರ್ಶಾತ್ಮಕ ಮುನ್ನುಡಿಯೊಂದಿಗೆ ಕಾವ್ಯವೇ ಒಂದು ಚಿಕಿತ್ಸೆ ಎಂಬ ಅರ್ಥದಲ್ಲಿ ಮಾಮಿಡಿ ಹರಿಕೃಷ್ಣ ಅವರು ಬರೆದ ‘ಪೋಯಟ್ರಿ ಒಂದು ಫೀಲಿಂಗ್, ಒಂದು ಕೆಥಾರ್ಸಿಸ್ ಒಂದು ಥೆರಪಿ’ ಎಂಬ ಲೇಖನ, ಈ ಕಾವ್ಯದ ಹಿನ್ನೆಲೆಯನ್ನು ವಿವರಿಸಿ ಮೂಲ ಲೇಖಕಿ- ಅನುವಾದಕಿಯರ ಮಾತುಗಳಿವೆ. ************************************************************************ ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ
ಗಾಯಗೊಂಡ ಹೃದಯದ ಸ್ವಗತ Read Post »
ಅಂಕಣ ಬರಹ ಗಾನ್ ವಿತ್ ದ ವಿಂಡ್ ಗಾನ್ ವಿತ್ ದ ವಿಂಡ್ಮೂಲ ಇಂಗ್ಲಿಷ್ : ಮಾರ್ಗರೆಟ್ ಮಿಶೆಲ್ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟನೆಯ ವರ್ಷ : ೨೦೦೪ : ಎಂದಿನಂತೆ ಶ್ಯಾಮಲಾ ಮಾಧವ ತಮ್ಮ ಅನುವಾದಕ್ಕಾಗಿ ಒಂದು ಕ್ಲಾಸಿಕ್ ಕಾದಂಬರಿಯನ್ನು ಎತ್ತಿಕೊಂಡಿದ್ದಾರೆ. ೧೮೬೧ರಲ್ಲಿ ಅಮೆರಿಕಾದಲ್ಲಿ ನಡೆದ ಅಂತರ್ಯುದ್ಧದ ಸಂದರ್ಭದ ಒಂದು ಕಥೆ ಇಲ್ಲಿದೆ. ಆದ್ದರಿಂದ ಕಥೆಯ ಜತೆಜತೆಗೇ ಯುದ್ಧದ ವರ್ಣನೆಯೂ, ಅದರಿಂದಾಗುವ ಅನಾಹುತಗಳ ವರ್ಣನೆಯೂ ಸಾಗುತ್ತದೆ. ದಕ್ಷಿಣ ಅಮೇರಿಕಾದ ಜಾರ್ಜಿಯಾದ ಟಾರಾ ಎಂಬಲ್ಲಿನ ಒಂದು ಪ್ಲಾಂಟೇಷನ್ ಮಾಲೀಕರ ಮುದ್ದಿನ ಮಗಳು ಸ್ಕಾರ್ಲೆಟ್ ಓಹರಾ. ಅವಳು ತನ್ನನ್ನು ಮದುವೆಯಾಗಲು ಬಂದ ಅನೇಕ ಯುವಕರನ್ನು ನಿರಾಕರಿಸಿ ಆಶ್ಲೆ ವಿಲ್ಕಿಸ್ ಎಂಬವನನ್ನು ಇಷ್ಟಪಟ್ಟು ಮದುವೆಯಾಗ ಬಯಸುತ್ತಾಳೆ. ಆದರೆ ಆಶ್ಲೆ ಆಗಲೇ ಸಾಮಾನ್ಯ ರೂಪಿನ ಕೃಶಕಾಯದ ಹುಡುಗಿ ಮೆಲಾನಿ ಹ್ಯಾಮಿಲ್ಟನ್ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆAದು ತಿಳಿದಾಗ ಅವಳು ನಿರಾಶಳಾಗುತ್ತಾಳೆ. ಆದರೂ ಆಶ್ಲೆ ಮೇಲಿನ ಅವಳ ಪ್ರೀತಿ ಕಡಿಮೆಯಾಗುವುದಿಲ್ಲ. ಆ್ಲಶ್ಲೆ ಅವಳನ್ನು ತಿರಸ್ಕರಿಸುವುದನ್ನು ಸಾಹಸಪ್ರಿಯ ಮತ್ತು ಒರಟು ಸ್ವಭಾವದ ರ್ಹೆಟ್ ಬಟ್ಲರ್ ಎಂಬವನು ನೋಡುತ್ತಾನೆ. ಅವನಿಗೆ ಸ್ಕಾರ್ಲೆಟ್ ಮೇಲೆ ಮನಸ್ಸಿರುತ್ತದೆ. ಆಶ್ಲೆಯ ಮೇಲೆ ಸೇಡು ತೀರಿಸುವುದಕ್ಕೋಸ್ಕರವೋ ಎಂಬAತೆ ಸ್ಕಾರ್ಲೆಟ್ ಭೋಳೆ ಸ್ವಭಾವದ ಮೆಲಾನಿಯ ಅಣ್ಣ ಚಾರ್ಲ್ಸ್ ಹ್ಯಾಮಿಲ್ಟನ್ನನ್ನು ವಿವಾಹವಾಗುತ್ತಾಳೆ. ಆದರೆ ಚಾರ್ಲ್ಸ್ ಯುದ್ಧಕ್ಕೆ ಹೋದವನು ಅಲ್ಲೇ ಸಾಯುತ್ತಾನೆ. ಸ್ಕಾರ್ಲೆಟ್ಗೆ ತಾನು ಗರ್ಭಿಣಿಯೆಂದು ಗೊತ್ತಾಗುತ್ತದೆ. ಟಾರಾದಲ್ಲಿ ವೈರಿಗಳ ದಾಳಿಯ ಕಾರಣದಿಂದ ಅನ್ನಾಹಾರಕ್ಕೆ ಕಷ್ಟವಾಗಿ ಸ್ಕಾರ್ಲೆಟ್ ಮೆಲಾನಿಯ ಜತೆಗೂಡಿ ಅಟ್ಲಾಂಟಾಕ್ಕೆ ಹೋಗಿ ವಾಸಿಸುತ್ತಾಳೆ. ಅಲ್ಲಿ ಅವಳು ಪುನಃ ರ್ಹೆಟ್ ನನ್ನು ಭೇಟಿಯಾಗುತ್ತಾಳೆ. ಅವನು ಅವಳನ್ನು ತನ್ನ ಒರಟು ಮಾತುಗಳಿಂದ ನೋಯಿಸುತ್ತಾನಾದರೂ ಟಾರಾದ ಸಾಮಾಜಿಕ ಅಗತ್ಯಗಳಿಗೆ ಅವಳು ಸ್ಪಂದಿಸಬೇಕೆಂದು ಪ್ರೋತ್ಸಾಹಿಸುತ್ತಾನೆ. ಮೆಲಾನಿ ಹೆರಿಗೆಯ ನೋವಿನಲ್ಲಿದ್ದಾಗ ವೈರಿಗಳಾದ ಯಾಂಕಿಗಳು ಅಟ್ಲಾಂಟಕ್ಕೂ ಮುತ್ತಿಗೆ ಹಾಕುತ್ತಾರೆ. ಆಗ ಸ್ಕಾರ್ಲೆಟ್ ಮೆಲಾನಿಯನ್ನೂ ಅವಳ ಮಗುವನ್ನೂ ತನ್ನ ಮಗುವನ್ನೂ ಕರೆದುಕೊಂಡು ಟಾರಾಕ್ಕೆ ಬರುತ್ತಾಳೆ. ಟಾರಾದಲ್ಲೂ ಯಾಂಕಿಗಳ ಆಕ್ರಮಣದ ಪರಿಣಾಮವಾಗಿ ಸಾಕಷ್ಟು ಅನಾಹುತಗಳಾಗಿವೆ. ಸ್ಕಾರ್ಲೆಟ್ಳ ತಾಯಿ ತೀರಿಹೋಗಿ ತಂದೆಗೆ ಬುದ್ಧಿಭ್ರಮಣೆಯಾಗಿದೆ. ಪ್ಲಾಂಟೇಷನ್ ಪೂರ್ತಿಯಾಗಿ ಆಕ್ರಮಣಕಾರರಿಂದ ಹಾಳಾಗಿ ಹೋಗಿದೆ. ಅಲ್ಲದೆ ಆಸ್ತಿಯ ಮೇಲಿನ ತೆರಿಗೆಯನ್ನು ಹೆಚ್ಚು ಮಾಡಿದ್ದಾರೆಂದೂ ಅವಳ ಆಸ್ತಿಯನ್ನು ಲಪಟಾಯಿಸುವುದು ಅವರ ಉದ್ದೇಶವೆಂದೂ ಸ್ಕಾರ್ಲೆಟ್ಳಿಗೆ ಸುದ್ದಿ ಸಿಗುತ್ತದೆ. ತನ್ನ ಆಸ್ತಿಯನ್ನು ತಾನು ಉಳಿಸಲೇ ಬೇಕೆಂದು ಅವಳು ತೆರಿಗೆಯ ಹಣವನ್ನು ಸಂಪಾದಿಸಲು ಅಟ್ಲಾಂಟಕ್ಕೆ ಬರುತ್ತಾಳೆ. ಟಾರಾದ ಪ್ಲಾಂಟೇಷನನ್ನು ಮೊದಲ ಸ್ಥಿತಿಗೆ ತಂದೇ ತೀರುವೆನೆಂದು ಹಠ ತೊಡುತ್ತಾಳೆ. ಆದರೆ ಹಣ ಸಂಪಾದಿಸುವ ವಿಚಾರದಲ್ಲಿ ಅವಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾಳೆ. ಒಂದು ಹಂತದಲ್ಲಿ ರ್ಹೆಟ್ನನ್ನು ಮದುವೆಯಾಗುತ್ತಾಳೆ. ಅವನಿಂದ ಒಂದು ಮಗುವನ್ನೂ ಪಡೆಯುತ್ತಾಳೆ. ಆದರೆ ಸ್ವಲ್ಪ ಕಾಲದ ನಂತರ ರ್ಹೆಟ್ ಅವಳನ್ನು ತಿರಸ್ಕರಿಸುತ್ತಾನೆ. ಆಗ ಸ್ಕಾರ್ಲೆಟ್ಗೆ ತಾನು ಅವನನ್ನು ಪ್ರೀತಿಸುತ್ತಿದ್ದೇನೆಂದು ಅರಿವಾಗುತ್ತದೆ, ಅವನ ಪ್ರೀತಿಯನ್ನು ಹೇಗಾದರೂ ಮಾಡಿ ಸಂಪಾದಿಸಲೇ ಬೇಕೆಂದು ಅವಳು ನಿರ್ಧರಿಸುವುದರೊಂದಿಗೆ ಕಾದಂಬರಿ ಮುಗಿಯುತ್ತದೆ. ಸ್ಕಾರ್ಲೆಟ್ಳ ದಿಟ್ಟತನದ ಚಿತ್ರಣವಷ್ಟೇ ಕಾದಂಬರಿಯ ಪ್ರಮುಖ ಅಂಶವಲ್ಲ. ಪುರುಷಾಹಂಕಾರ, ಹಠ, ಪ್ರತೀಕಾರ, ಅಧಿಕಾರ ದಾಹಗಳ ಕಾರಣದಿಂದ ನಡೆಯುವ ಯುದ್ಧವು ಸ್ತ್ರೀಯರ ಬದುಕನ್ನು ಯಾವ ರೀತಿ ಮೂರಾಬಟ್ಟೆ ಮಾಡುತ್ತದೆ ಅನ್ನುವುದನ್ನು ಚಿತ್ರಿಸುವುದು ಕಾದಂಬರಿಯ ಉದ್ದೇಶವಾಗಿದೆ. ಎಲ್ಲರ ಬದುಕೂ ಯುದ್ಧವು ಉಂಟು ಮಾಡುವ ಅನಾಹುತಗಳಿಂದಾಗಿ ಗಾಳಿಯ ಹೊಡೆತಕ್ಕೆ ಸಿಕ್ಕಿ ಸೂತ್ರ ಕಿತ್ತ ಗಾಳಿಪಟದಂತಾಗುತ್ತದೆ ಅನ್ನುವುದು ಶೀರ್ಷಿಕೆಯ ಅರ್ಥ. ಶ್ಯಾಮಲಾ ಮಾಧವ ಅವರ ಅನುವಾದವು ಎಂದಿನಂತೆ ಹೃದ್ಯವಾಗಿದೆ ********************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ
ಅಂಕಣ ಬರಹ ಗುರುತುಗಳು ಗುರುತುಗಳುಮೂಲ ಮಲೆಯಾಳ ; ಸೇತು ಕನ್ನಡಕ್ಕೆ : ಡಾ.ಅಶೋಕ್ ಕುಮಾರ್ಪ್ರಕಾಶನ : ಕೇಂದ್ರಸಾಹಿತ್ಯ ಅಕಾಡೆಮಿಪ್ರಕಟಣೆಯ ವರ್ಷ : ೨೦೧೧ಬೆಲೆ : ರೂ.೨೦೦ಪುಟಗಳು : ೩೪೬ ಇದು ಮುಖ್ಯವಾಗಿ ಸಿಂಗಲ್ ಪೇರೆಂಟ್ ಆಗಿರುವ ಒಬ್ಬ ತಾಯಿ ಮತ್ತು ಮಗಳ ಸುತ್ತ ಹೆಣೆಯಲಾದ ಕತೆ. ತಾಳ ತಪ್ಪಿದ ವೈವಾಹಿಕ ಜೀವನದಿಂದ ನೊಂದು ಸ್ವತಂತ್ರವಾಗಿ ಬಾಳುತ್ತೇನೆಂದು ಸಬರ್ವಾಲ್ ಕುಟುಂಬವು ನಡೆಸುತ್ತಿರುವ ಒಂದು ಕಂಪೆನಿಯ ಹೆಚ್.ಆರ್.ಮುಖ್ಯಸ್ಥೆಯಾಗಿ ಸೇರುತ್ತಾಳೆ ಪ್ರಿಯಂವದಾ ಮೆನೋನ್. ಬುದ್ಧಿವಂತೆಯಾದ ಆಕೆ ಪರಿಶ್ರಮ ಪಟ್ಟು ದುಡಿಯುವವಳು. ತನ್ನ ಪ್ರೀತಿಯ ಮಗಳು ನೀತುವನ್ನು ಎಂ.ಬಿ.ಎ.ಓದಿಸುತ್ತಿದ್ದಾಳೆ. ಅಪ್ಪನ ಪ್ರೀತಿಯೆಂದರೆ ಏನೆಂದು ತಿಳಿಯದ ನೀತು ವಾಚಾಳಿಯಾಗಿ ಬೆಳೆಯುತ್ತಾಳೆ ಒಮ್ಮೆ ತನ್ನ ಉದ್ಯೋಗದ ಒಂದು ಭಾಗವಾಗಿ ಗೋವಾದಲ್ಲಿ ನಡೆಯುವ ಉದ್ಯಮಿಗಳ ಸೆಮಿನಾರಿನಲ್ಲಿ ಪ್ರಿಯಂವದಾ ಪ್ರಬಂಧ ಮಂಡಿಸುತ್ತಾಳೆ. ಅಲ್ಲಿ ಆಕೆ ಬಹಳ ಹಿಂದಿನಿಂದಲೂ ತನ್ನ ಗುರುವೆಂದು ಭಾವಿಸಿ ಗೌರವಿಸುತ್ತಿದ್ದ ಡಾ.ರಾಯ್ ಚೌಧುರಿಯನ್ನು ಭೇಟಿಯಾಗುತ್ತಾಳೆ. ಮಾತನಾಡುತ್ತ ಆತನಿಗೆ ಮಾನಸಿಕವಾಗಿ ತುಂಬ ಹತ್ತಿರವಾಗುತ್ತಾಳೆ. ಅವರ ಸಂಬಂಧ ಊರಿಗೆ ಮರಳಿದ ನಂತರವೂ ಮುಂದುವರಿಯುತ್ತದೆ. ಆದರೆ ಆತನೊಂದಿಗಿನ ಅಮ್ಮನ ಈ ಆತ್ಮೀಯತೆ ನೀತುವಿಗೆ ಇಷ್ಟವಾಗುವುದಿಲ್ಲ. ನೀತುವಿನ ತಿರಸ್ಕಾರವು ಪ್ರಿಯಂವದೆಯ ಔದ್ಯೋಗಿಕ ಮತ್ತು ಕೌಟುಂಬಿಕ ಜೀವನದ ಸಂತೋಷಕ್ಕೆ ಭಂಗ ತರುತ್ತದೆ. ತನ್ನ ಮನೆಗೆ ಬರುವ ನೀತುವಿನ ಗೆಳತಿಯರ ಮೂಲಕ ಅವಳ ಜತೆಗೆ ರಾಜಿ ಮಾಡಿಕೊಳ್ಳಲು ಪ್ರಿಯಂವದಾ ಪ್ರಯತ್ನಿಸುತ್ತಾಳೆ. ನೀತು ಹರಿನಾರಾಯಣನೆಂಬ ತನ್ನ ಬುದ್ಧಿಜೀವಿ ಸಹಪಾಠಿಯ ಸ್ನೇಹ ಬೆಳೆಸುತ್ತಾಳೆ. ಗೆಳತಿಯರು ಬೇಡವೆಂದು ಉಪದೇಶಿಸಿದರೂ ಉಪಯೋಗವಾಗುವುದಿಲ್ಲ. ನೀತು ಅಮ್ಮನನ್ನು ನಿರ್ಲಕ್ಷಿಸಿ ವಿದೇಶದಲ್ಲಿದ್ದ ತನ್ನ ಅಪ್ಪ ರಂಜಿತ್ಗೆ ಹತ್ತಿರವಾಗಲು ಪ್ರಯತ್ನಿಸುತ್ತಾಳೆ. ಹತಾಶಳಾದ ಪ್ರಿಯಂವದಾಳ ಕನಸುಗಳಲ್ಲಿ ಅವಳು ಗೋವಾದಲ್ಲಿ ಕಂಡ ಪಾತ್ರಗಳು ಮತ್ತೆ ಮತ್ತೆ ಬರುತ್ತವೆ. ತನ್ನ ಮನೆಯಲ್ಲಿ ಸಹಾಯಕ್ಕೆಂದು ಪ್ರಿಯಂವದಾ ನಿವೇದಿತಾ ಎಂಬ ಪರ್ಸನಲ್ ಮ್ಯಾನೇಜರ್ನ್ನು ನೇಮಿಸಿಕೊಳ್ಳುತ್ತಾಳೆ. ರೇವತಿ ಎಂಬ ನಿಜನಾಮಧೇಯವುಳ್ಳ ಆಕೆಯನ್ನು ಕಂಪೆನಿಯಲ್ಲೂ ತನ್ನ ಜೂನಿಯರಾಗಿ ನೇಮಿಸಿಕೊಳ್ಳುತ್ತಾಳೆ. ರೇವತಿಯ ಜತೆ ಸೇರಿ ಪ್ರಿಯಂವದಾ ಕಂಪೆನಿಯಲ್ಲಿ ಹಲವಾರು ಬದಲಾವಣೆಗಳನ್ನು ತರುತ್ತಾಳೆ. ಮಗಳ ಬಗ್ಗೆ ಚಿಂತೆಯಿಂದಾಗಿ ಕೆಲಸ ಮಾಡಲಾಗದೆ ಕಂಪೆನಿಯಿಂದ ದೀರ್ಘಕಾಲದ ರಜಕ್ಕಾಗಿ ಅರ್ಜಿ ಹಾಕುತ್ತಾಳೆ. ಇದರೆಡೆಯಲ್ಲಿ ನೀತುವಿನ ಮನಃಪರಿವರ್ತನೆಯಾಗಿ ಅವರಿಬ್ಬರೂ ಊರಲ್ಲಿ ನೆಲೆಸಲು ಬರುತ್ತಾರೆ. ಉಳಿದದ್ದನ್ನು ಓದುಗರ ಕಲ್ಪನೆಗೆ ಬಿಟ್ಟು ಕಾದಂಬರಿ ಇಲ್ಲಿಗೆ ಮುಕ್ತಾಯವಾಗುತ್ತದೆ. ಕಾದಂಬರಿಯಲ್ಲಿ ಅಲ್ಲಲ್ಲಿ ಬರುವ ಮಳೆಗೆ ಅತೀವ ಸೌಂದರ್ಯವೂ ಆಕರ್ಷಣೆಯೂ ಇದೆ. ಬದುಕಿನ ಸಂಕೀರ್ಣ ಸಮಸ್ಯೆಗಳು, ಮನುಷ್ಯ ಸಂಬಂಧಗಳ ವಾಸ್ತವ ಸತ್ಯ ಹಾಗೂ ಟೊಳ್ಳುತನ, ಸ್ವಪ್ನ ಸದೃಶ ನಿರೂಪಣೆಯೊಂದಿಗೆ ಇಲ್ಲಿ ತಾಯಿ-ಮಗಳ ಬದುಕು ಚಿತ್ರಣಗೊಂಡಿದೆ. ಅದಮ್ಯವೂ ಸಂಕೀರ್ಣವೂ ಆದ ಮನುಷ್ಯ ಮನಸ್ಸು ಅನುಭವಿಸುವ ಸಂಕಟಗಳಿಗೆ ಸರಳ ಉತ್ತರಗಳನ್ನು ಪಡೆಯುವ ಬಗೆಯನ್ನು ಕಾದಂಬರಿ ಹೇಳುತ್ತದೆ. ಒಂದು ಊರಿನ ಎಲ್ಲಾ ಸುಖ-ದುಃಖಗಳನ್ನು ಕಪ್ಪು-ಬಿಳುಪುಗಳೊಂದಿಗೆ ಶರೀರದ ಮೇಲೆ ಗುರುತುಗಳಾಗಿಸಿದ ಹಿಮ-ಧ್ರುವಗಳಲ್ಲಿ ಏಕಾಂತ ಧ್ಯಾನದಲ್ಲಿ ಮುಳುಗಿದ ಪೆಂಗ್ವಿನ್ಗಳು ಪೂರ್ವಜನ್ಮದಲ್ಲಿ ವಿಧವೆಗಳಾಗಿದ್ದವೆಂದೂ ಅವುಗಳ ಕುಲದಲ್ಲಿ ಹುಟ್ಟಿದ ಪ್ರಿಯಂವದಾಳ ಹಾಗೂ ಮಗಳು ನೀತುವಿನ ಕತೆಗಳನ್ನು ಪ್ರಕೃತಿಯೊಂದಿಗೆ ಮಿಳಿತಗೊಳಿಸಿ ಸೇತು ಅವರು ಮನೋಜ್ಞವಾಗಿ ಪ್ರಸ್ತುತಗೊಳಿಸಿದ್ದಾರೆ. ನಗರೀಕರಣಕ್ಕೊಳಗಾದ ಬದುಕಿನಲ್ಲಿ ಮನುಷ್ಯ ಮನಸ್ಸುಗಳ ಆತಂಕ, ತಲ್ಲಣ, ಕೌಟುಂಬಿಕ ಬದುಕಿನ ಸಂಘರ್ಷಗಳು,ಹಾಗೂ ಎಡೆಬಿಡದೆ ಅನುಭವಿಸುವ ನೋವು ಈ ಕಾದಂಬರಿಯಲ್ಲಿವೆ. ಭೌತಿಕ ಜಗತ್ತಿನ ಆಂತರಿಕ ಸಂಘರ್ಷಗಳ ನಡುವೆ ವ್ಯಕ್ತಿಯ ಮನಸ್ಸುಗಳು ಸೃಷ್ಟಿಸುವ ವಿಚಿತ್ರ ಅನುಭವಗಳು ಓದುಗರಲ್ಲಿ ಹೊಸ ಕುತೂಹಲವನ್ನು ಹುಟ್ಟಿಸುತ್ತವೆ. ಮೂಲ ಮಲೆಯಾಳದ ಸುಭಗ ಶೈಲಿಗೆ ನಿಷ್ಠರಾಗಿ ಅಶೋಕ ಕುಮಾರ್ ಅವರು ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ************************************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ
ಅಂಕಣ ಬರಹ ಹೂಕೊಂಡ ಹೂಕೊಂಡತಮಿಳು ಮೂಲ : ಪೆರುಮಾಳ್ ಮುರುಗನ್ಅನುವಾದ : ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೨೫ಪುಟಗಳು : ೧೪೪ ಪುರುಷ ಪ್ರಧಾನ ಸಮಾಜದಲ್ಲಿ ಸ್ತಿçಯು ಶೋಷಣೆಗೊಳಗಾಗುವ ದುರಂತ ಕಥಾವಸ್ತುವನ್ನು ಹೊಂದಿದ ಕಾದಂಬರಿ ಇದು. ಜಾತಿ ಸಮಸ್ಯೆಯೂ ಇದರ ವಿನ್ಯಾಸದ ಇನ್ನೊಂದು ಮುಖ. ಅಲ್ಲದೆ ಸರಳ ಸ್ವಭಾವದ ಮಂದಿ ಎಂದು ಎಲ್ಲರೂ ಭಾವಿಸುವ ಗ್ರಾಮೀಣರಲ್ಲೂ ಎಂಥ ಕ್ರೌರ್ಯವಿರಬಹುದು ಎನ್ನುವ ಕಹಿ ಸತ್ಯವನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ. ಮದುವೆಯಾಗಿ ಕೇವಲ ಎರಡು ವರ್ಷಗಳಲ್ಲೇ ಗಂಡನನ್ನು ಕಳೆದುಕೊಂಡ ಮಾರಾಯಿ ಕಡು ದಾರಿದ್ರö್ಯದ ಕಷ್ಟಗಳನ್ನೆದುರಿಸುತ್ತಲೇ ಮಗ ಕುಮರೇಶನನ್ನು ಬೆಳೆೆಸಿ ದೊಡ್ಡವನನ್ನಾಗಿಸುತ್ತಾಳೆ. ಉದ್ಯೋಗವನ್ನರಸಿ ಪಕ್ಕದ ತೋಲೂರಿಗೆ ಹೋಗುವ ಕುಮರೇಶ ಅಲ್ಲಿ ಸೋಡಾ ಉತ್ಪಾದನೆಯ ಕೆಲಸದಲ್ಲಿ ತೊಡಗುತ್ತಾನೆ. ಆ ಊರಿನಲ್ಲಿ ಪರಿಚಯವಾದ ಸರೋಜಳನ್ನು ಪ್ರೀತಿಸಿ ತನ್ನ ತಾಯಿಗಾಗಲಿ, ಅವಳ ಅಪ್ಪ-ಅಣ್ಣನಿಗಾಗಲಿ ತಿಳಿಸದೆ ದೇವಸ್ಥಾನದಲ್ಲಿ ಸರಳ ವಿವಾಹವಾಗಿ ಅವಳನ್ನು ಊರಿಗೆ ಕರೆತರುತ್ತಾನೆ. ಆದರೆ ಅಲ್ಲಿ ಕುಮರೇಶನ ತಾಯಿ ಸೊಸೆಯನ್ನು ಸ್ವೀಕರಿಸಲು ಸುತರಾಂ ಒಪ್ಪುವುದಿಲ್ಲ. ಹುಡುಗಿ ಸುಂದರಿಯಾದರೂ ಯಾವ ಜಾತಿಯವಳೋ ಎಂಬುದು ಅವಳ ಆತಂಕ. ಆದ್ದರಿಂದ ದಿನವಿಡೀ ಸೊಸೆಯನ್ನು ಬಾಯಿಗೆ ಬಂದAತೆ ಬೈಯುತ್ತ ಮನ ನೋಯಿಸುತ್ತ ಇರುತ್ತಾಳೆ. ಸರೋಜಳಿಗೆ ಹೊಸ ವಾತಾವರಣ ಭಯಾನಕವೆನ್ನಿಸುತ್ತದೆ. ಊರಿನ ಹೆಂಗಸರೆಲ್ಲರೂ ಆಗಾಗ ಬಂದು ಅವಳ ಕುಲ-ಗೋತ್ರಗಳನ್ನು ವಿಚಾರಿಸುತ್ತ, ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಇರುತ್ತಾರೆ. ತೋಲೂರಿನ ಪಟ್ಟಣದ ಜೀವನಕ್ಕೆ ಒಗ್ಗಿಕೊಂಡಿದ್ದ ಸರೋಜಳಿಗೆ ಹಳ್ಳಿಯ ಬಡ ಮನೆಯ ಸರಳ ಜೀವನಕ್ಕೆ ಹೊಂದಿಕೊಳ್ಳುವುದು ಮತ್ತು ಅವರೆಲ್ಲರ ನಿಂದನೆಗಳನ್ನು ಸಹಿಸಿಕೊಳ್ಳುವ ನರಕ ಯಾತ£ಗಳುÉ ಅಸಹನೀಯವೆನ್ನಿಸುತ್ತದೆ. ಅವಳು ಕುಮರೇಶನನ್ನು ವಶೀಕರಿಸಿಕೊಂಡ ಮಾಟಗಾತಿಯೆಂದು ಎಲ್ಲರೂ ವ್ಯಂಗ್ಯ ಮಾತನಾಡಿದಾಗ ಅಲ್ಲಿಂದ ಎಲ್ಲಾದರೂ ಓಡಿ ಹೋಗಬೇಕು ಅನ್ನಿಸುತ್ತದೆ. ಒಮ್ಮೆ ಕುಮರೇಶ್ ಹೊಸದಾಗಿ ಸೋಡಾ ಫ್ಯಾಕ್ಟರಿ ಆರಂಭಿಸುವ ಬಗ್ಗೆ ಮಾತನಾಡಲು ಪಕ್ಕದ ಊರಿಗೆ ಹೋಗಿರುತ್ತಾನೆ. ಅವನು ಆ ರಾತ್ರಿ ಮನೆಗೆ ಬರುವುದಿಲ್ಲವೆಂದು ತಿಳಿದ ಅವನ ತಾಯಿ ಮಾರಾಯಿ ಊರಿನ ಕೆಲವು ಮಂದಿಯನ್ನು ಕೂಡಿಕೊಂಡು ಸರೋಜಳನ್ನು ಕೊಲ್ಲುವ ಯೋಜನೆ ಹಾಕುತ್ತಾಳೆ. ಆದರೆ ಆ ಸಂಚನ್ನು ಅಡಗಿ ಕೇಳಿದ ಸರೋಜ ಅಲ್ಲಿಂದೆದ್ದು ಮುಳ್ಳು ಪೊದೆಗಳ ಹಿಂದೆ ಅಡಗಲು ಹೋಗುತ್ತಾಳೆ. ಅಪಾಯಕಾರಿಯೂ ಭಯಾನಕವೂ ಆದ ಆ ಜಾಗದಲ್ಲಿ ಒಳಗೊಳಗೆ ಜಾರುವ ಸರೋಜಾಳ ಮೈಕೈಗಳಿಗೆ ಗಂಭೀರ ಗಾಯಗಳಾಗುತ್ತವೆ. ಕೊಲೆ ಪಾತಕಿಗಳು ಅವಳನ್ನು ಹೇಗಾದರೂ ಮಾಡಿ ಅಲ್ಲಿಂದ ಹೊರಗೆಳೆದು ಕೊಲ್ಲಲು ಪ್ರಯತ್ನಿಸುತ್ತಾರೆ. ಆದರೆ ಅವರ ಪ್ರಯತ್ನ ಫಲಕಾರಿಯಾಗುವುದಿಲ್ಲ. ಸರೋಜಾ ಭಯದಿಂದ ತತ್ತರಿಸುತ್ತಿದ್ದಂತೆ ಕಿವಿಯ ಮೇಲೆ ಬಿದ್ದ ಕುಮರೇಶನ ಸೈಕಲ್ ಬೆಲ್ಲಿನ ಶಬ್ದ ಅವಳಿಗೆ ಮರುಜೀವ ಕೊಡುತ್ತದೆ. ಹೆಣ್ಣನ್ನು ವಿನಾಕಾರಣ ಪೀಡಿಸುವ ನಮ್ಮ ಸಮಾಜ ಎಂದು ಬದಲಾಗುತ್ತದೋ ಎಂಬ ಆತಂಕವನ್ನು ಈ ಕಾದಂಬರಿ ನಮ್ಮಲ್ಲಿ ಹುಟ್ಟಿಸುತ್ತದೆ. ನಲ್ಲತಂಬಿಯವರ ಅನುವಾದ ಆಡುಭಾಷೆಯ ಬಳಕೆಯಿಂದ ಆಪ್ತವಾಗುತ್ತದೆ. ************************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ
ಅಂಕಣ ಬರಹ ಫ್ರಾಂಕಿನ್ಸ್ಟೆನ್ ಫ್ರಾಂಕಿನ್ಸ್ಟೆನ್ಮೂಲ ಇಂಗ್ಲಿಷ್ : ಮೇರಿ ಷೆಲ್ಲಿ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟಣೆಯ ವರ್ಷ :೨೦೦೭ ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್ಸ್ಟೆöನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ. ನಿಸರ್ಗ ನಿಯಮಗಳ ವಿರುದ್ಧ ಹೋಗುವ ಅಹಂಕಾರವನ್ನು ಮನುಷ್ಯ ತೋರಿಸಿದರೆ ಪರಿಣಾಮವೇನಾಗಬಹುದು ಎಂಬ ವಿಷಯದ ಕುರಿತುಳ್ಳ ಈ ಕಾದಂಬರಿತನ್ನ ನಿರೂಪಣೆಗೆ ಫ್ಯಾಂಟಸಿ ಶೈಲಿಯನ್ನು ಆಯ್ದುಕೊಂಡಿದೆ ಮಾತ್ರವಲ್ಲದೆ ಅದು ಒಂದು ಭಯಾನಕ ವಾತಾವರಣವನ್ನೂ ಸೃಷ್ಟಿಸುತ್ತದೆ. ಹಿಮಾಚ್ಛಾದಿತ ಉತ್ತರ ಧ್ರುವದತ್ತ ಅನ್ವೇಷಕನಾಗಿ ಸಾಹಸ ಯಾತ್ರೆ ಕೈಗೊಳ್ಳುವ ವಾಲ್ಟನ್ ತನ್ನ ಪ್ರಿಯ ಸೋದರಿ ಮಾರ್ಗರೆಟ್ಗೆ ಬರೆಯುವ ಪತ್ರಗಳೇ ಇಲ್ಲಿ ಇಡೀ ಕಥೆಯನ್ನು ಹೇಳುತ್ತವೆ. ವಾಲ್ಟನ್ ಹಿಮ ಸಾಗರದಲ್ಲಿ ಭೇಟಿಯಾಗುವ ಫ್ರಾಂಕಿನ್ಸ್ಟೆöನ್ ಎಂಬ ವ್ಯಕ್ತಿ ಅವನಲ್ಲಿ ತನ್ನ ಭೀಭತ್ಸ ಅನುಭವಗಳನ್ನು ಹೇಳಿಕೊಳ್ಳುತ್ತಾನೆ. ಪ್ರಾಕೃತಿಕ ವಿಜ್ಞಾನದ ಅವ್ಯಕ್ತ ಸೆಳೆತಕ್ಕೊಳಗಾಗಿ ಆತ ಹಗಲು-ರಾತ್ರಿ ಪರಿಶ್ರಮ ಪಟ್ಟು ಆ ವಿಷಯದ ಆಳಕ್ಕಿಳಿದು ಅಧ್ಯಯನ ನಡೆಸಿ ಅದುವರೆಗೆ ಯಾವ ಮಾನವನೂ ಮಾಡದಿರುವ, ಮೈ ನವಿರೇಳಿಸುವ ಒಂದು ವಿಶಿಷ್ಟ ಪ್ರಯೋಗವನ್ನು ಕೈಗೊಳ್ಳುತ್ತಾನೆ. ಸತ್ತ ಮನುಷ್ಯರ ಶವಗಳಿಂದ ಪ್ರತಿಯೊಂದು ಬಿಡಿ ಭಾಗಗಳನ್ನು ತೆಗೆದು ಅವೆಲ್ಲವನ್ನೂ ಪುನಃ ಸುಸ್ಥಿತಿಯಲ್ಲಿ ಜೋಡಿಸಿ ಒಂದು ದೈತ್ಯಾಕೃತಿಯನ್ನು ನಿರ್ಮಿಸಿ ಅದರೊಳಗೆ ಜೀವ ತುಂಬುವ ಒಂದು ಭಯಾನಕ ಕೃತ್ಯವದು. ರಾಕ್ಷಸನಂತೆ ವಿಕಾರನೂ ಭಯಂಕರನೂ ಆಗಿ ಬರುವ ಆ ದೈತ್ಯ ಮುಂದೆ ಬಂದು ನಿಲ್ಲುತ್ತಲೇ ಫ್ರಾಂಕಿನ್ಸ್ಟೆöನ್ ಭಯಗೊಂಡು ಓಡಿ ಹೋಗಿ ತನ್ನ ಊರು ಸೇರುತ್ತಾನೆ. ಆದರೆ ಆ ದೈತ್ಯ ಅವನನ್ನು ಅಲ್ಲಿಗೂ ಬಿಡದೆ ಹಿಂಬಾಲಿಸುತ್ತಾನೆ. ತನ್ನ ಸೃಷ್ಟಿಕರ್ತನನ್ನು ತಾನು ಮುಂದೇನು ಮಾಡಬೇಕೆಂದು ಕೇಳುವ ಅವಕಾಶಕ್ಕಾಗಿ ಕಾಯುತ್ತಾನೆ. ಮನುಷ್ಯ ಸಂಪರ್ಕದಲ್ಲಿ ಇರಲು ಅವನಿಂದ ಸಾಧ್ಯವಾಗುವುದಿಲ್ಲ. ಯಾಕೆಂದರೆ ಅವನನ್ನು ಕಂಡ ಕೂಡಲೇ ಎಲ್ಲರೂ ಕಿಟಾರನೆ ಕಿರುಚಿ ಓಡಿ ಹೋಗುತ್ತಾರೆ, ಇಲ್ಲವೇ ಎಲ್ಲರೂ ಜೊತೆ ಸೇರಿ ಅವನಿಗೆ ಹೊಡೆದು ಹಿಂಸಿಸಿ ಓಡಿಸುತ್ತಾರೆ. ಹೀಗೆ ಒಂಟಿತನದ ನೋವಿನ ಕ್ಷಣಗಳಲ್ಲಿ ದೈತ್ಯನು ತನ್ನ ಸೃಷ್ಟಿಕರ್ತನ ಬಗ್ಗೆ ಸಿಟ್ಟಾಗುತ್ತಾನೆ. ಕೋಪದ ಆವೇಶದಲ್ಲಿ ಅವನು ಫ್ರಾಂಕಿನ್ಸ್ಟೆöನ್ನ ಪುಟ್ಟ ತಮ್ಮನ ಕತ್ತು ಹಿಚುಕಿ ಅವನನ್ನು ಕೊಲ್ಲುತ್ತಾನೆ. ಆ ಕುರಿತು ಫ್ರಾಂಕಿನ್ಸ್ಟೆöನ್ ದುಃಖಿಸುತ್ತಿರುವಾಗ ಒಂದು ದಿನ ಕಾಡು ಪ್ರದೇಶವೊಂದರಲ್ಲಿ ಅವರಿಬ್ಬರು ಭೇಟಿಯಾಗಿ ದೈತ್ಯನು ತನ್ನ ಸೃಷ್ಟಿಕರ್ತನಲ್ಲಿ ತನ್ನ ನೋವನ್ನು ತೋಡಿಕೊಳ್ಳುತ್ತಾನೆ. ತನ್ನನ್ನು ಒಂಟಿತನ ಕಾಡುತ್ತಿದೆಯಾದ್ದರಿಂದ ತನಗೆ ತನ್ನಂತಯೇ ಇರುವ ಹೆಣ್ಣು ಜೀವವೊಂದನ್ನು ಸೃಷ್ಟಿಸಿ ಕೊಡಬೇಕಾಗಿ ದೈತ್ಯನು ಕೇಳಿಕೊಳ್ಳುತ್ತಾನೆ. ಆದರೆ ಇದರಿಂದ ಮಾನವ ಸಮುದಾಯಕ್ಕೆ ಅಪಾಯವಿದೆ ಎಂಬುದನ್ನರಿತ ಫ್ರಾಂಕಿಸ್ಟೆöನ್ ಅದಕ್ಕೊಪ್ಪುವುದಿಲ್ಲ. ರೋಷಗೊಂಡ ದೈತ್ಯನು ಫ್ರಾಂಕಿನ್ಸ್ಟೆöನ್ನ ಪ್ರೀತಿಪಾತ್ರರೆಲ್ಲರನ್ನೂ ಕೊಂದು ಕೊನೆಗೆ ಅವನನ್ನೂ ಕೊಲ್ಲಲು ಹೊರಡುತ್ತಾನೆ. ಕೊನೆಯ ಹಂತದಲ್ಲಿ ವಾಲ್ಟನ್ನ ಮುಂದೆ ಕಾಣಿಸಿಕೊಳ್ಳುವ ಫ್ರಾಂಕಿನ್ಸ್ಟೆöನ್ ತಾನಿನ್ನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಹೇಳಿ ಅಲ್ಲಿಂದ ಹೊರಟು ಹೋಗುತ್ತಾನೆ. ವಿಜ್ಞಾನವನ್ನು ಒಂದು ಮಿತಿಗಿಂತ ಆಚೆ ಬಳಸುವವರಿಗೆ ತಮ್ಮ ಸಾಮಾಜಿಕ ಜವಾಬ್ದಾರಿಯ ಅರಿವು ಇರಬೇಕೆಂದು ಈ ಕಾದಂಬರಿ ಎಚ್ಚರಿಸುತ್ತದೆ. ಶ್ಯಾಮಲಾ ಅವರ ಅನುವಾದ ಆಕರ್ಷಣೀಯವಾಗಿದೆ. ********************************** “ ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ
ಅಂಕಣ ಬರಹ ಸೋತು ಗೆದ್ದ ಮನುಷ್ಯ ಸೋತು ಗೆದ್ದ ಮನುಷ್ಯತೆಲುಗು ಮೂಲ : ಮಲ್ಲಾರೆಡ್ಡಿಅನುವಾದ : ಕಸ್ತೂರಿಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೦೪ ¥ಪುಟಗಳು :೧೫೨ ಇದು ತೆಲುಗು ಮೂಲದ ಮಲ್ಲಾರೆಡ್ಡಿಯವರ ಆತ್ಮಕಥೆ. ವಿಷಮ ಪರಿಸ್ಥಿತಿಗಳು ತಂದ ನೋವು-ಸಂಕಷ್ಟಗಳಿಂದಾಗಿ ಮಾನಸಿಕವಾಗಿ ನೊಂದು ಬದುಕಿನಲ್ಲಿ ಭರವಸೆಯನ್ನೇ ಕಳೆದುಕೊಂಡು ಮಾನಸಿಕವಾಗಿ ಅಸ್ವಸ್ಥನಾದ ವ್ಯಕ್ತಿಯೊಬ್ಬ ತನ್ನ ಎಲ್ಲಾ ಅನುಭವಗಳನ್ನು ಇಲ್ಲಿ ವಿವರವಾಗಿ ಮನಮುಟ್ಟುವಂತೆ ಹೇಳುತ್ತಾನೆ. ತೀರಾ ಎಳೆಯ ಹುಡುಗನಾಗಿದ್ದಾಗಲೇ ಸೂಕ್ಷ್ಮ ಸಂವೇದನೆಯುಳ್ಳವನಾಗಿದ್ದರಿಂದ ತನ್ನ ಸುತ್ತ ಮುತ್ತ ನಡೆಯುವ ಎಲ್ಲಾ ವಿದ್ಯಮಾನಗಳನ್ನು ಆತ ತಣ್ಣಗೆ ಗಮನಿಸುತ್ತಾನೆ. ಅವನದ್ದು ಅವಿಭಕ್ತ ಕುಟುಂಬ. ಅವನು ತಂದೆಗೆ ಎರಡನೆಯ ಹೆಂಡತಿಯ ಮಗ. ತನ್ನ ತಂದೆ ತನ್ನ ತಾಯಿಗೆ ಹೆಚ್ಚು ಪ್ರೀತಿಯನ್ನು ಕೊಟ್ಟು ಮೊದಲ ಹೆಂಡತಿಯನ್ನು ಕಡೆಗಣಿಸುವುದನ್ನು ಪುಟ್ಟ ಹುಡುಗ ನೋಡುತ್ತಾನೆ. ಮುಂದೆ ಮೊದಲ ಹೆಂಡತಿ ತನ್ನ ಪಾಲಿನ ಆಸ್ತಿಯನ್ನು ಕೇಳಿ ಕುಟುಂಬವನ್ನು ಬಿಟ್ಟು ತನ್ನ ಮಕ್ಕಳೊಂದಿಗೆ ಬೇರೆಡೆಗೆ ಹೋಗಿದ್ದು ಅವನನ್ನು ಅಪಾರವಾಗಿ ನೋಯಿಸುತ್ತದೆ. ಅವನು ದೊಡ್ಡಮ್ಮನ ಮಗನನ್ನು ಅಪಾರವಾಗಿ ಪ್ರೀತಿಸಿದ್ದ . ಚಿಕ್ಕವನಾಗಿದ್ದಾಗ ನೆರೆಮನೆಯ ರಾಮು ಅವನ ಆತ್ಮೀಯ ಗೆಳೆಯನಾಗಿದ್ದ. ಆದರೂ ಅವನಿಗೆ ಗೊತ್ತಿಲ್ಲದೆಯೇ ಅವನು ಒಮ್ಮೆ ರಾಮುವಿನ ಪೆನ್ನನ್ನು ಕದ್ದಿದ್ದ. ಮುಂದೆ ಹೈಸ್ಕೂಲು ಮುಗಿಸಿ ಹೈದರಾಬಾದಿನಲ್ಲಿ ಕಾಲೇಜು ಶಿಕ್ಷಣಕ್ಕಾಗಿ ಅವನು ಹೋಗುತ್ತಾನೆ. ಅಲ್ಲಿ ಸೀಟು ಸಿಕ್ಕದೆ ಅವನು ತುಂಬಾ ಅಡೆತಡೆಗಳನ್ನು ಅನುಭವಿಸಬೇಕಾಗುತ್ತದೆ. ಅದರ ಪರಿಣಾಮವಾಗಿ ಅವನು ಮನೋರೋಗಕ್ಕೆ ತುತ್ತಾಗುತ್ತಾನೆ. ಆರಂಭದಲ್ಲಿ ವೈದ್ಯರ ಬಳಿಗೆ ಹೋಗಲು ಯಾವುದೋ ಕೀಳರಿಮೆಯಿಂದಾಗಿ ಅವನು ಹಿಂದೇಟು ಹಾಕುತ್ತಾನೆ. ಆದರೆ ಸರಿಯಾದ ಸಮಯಕ್ಕೆ ಯಾರದ್ದೋ ಉಪದೇಶದಿಂದ ಸೂಕ್ತ ಚಿಕಿತ್ಸೆ ಪಡೆದು ಗುಣಮುಖನಾಗುತ್ತಾನೆ . ದೈಹಿಕವಾಗಿ ಗಟ್ಟಿಮುಟ್ಟಾಗಿದ್ದ ಅವನು ಮುಂದೆ ತನ್ನ ಶಿಕ್ಷಣವನ್ನು ಮುಂದುವರೆಸಿ ಭಾರತದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ ಅಲ್ಜೀರಿಯಾಗೂ ಹೋಗಿ ಅಲ್ಲಿ ಇಂಗ್ಲಿಷ್ ಅಧ್ಯಾಪಕನಾಗಿ ಉದ್ಯೋಗ ಗಳಿಸಿ ಜೀವನದಲ್ಲಿ ಯಶಸ್ವಿಯಾಗುತ್ತಾನೆ. ಅನೇಕರು ತಮಗೆ ರೋಗವಿದೆಯೆಂದು ಗೊತ್ತಿದ್ದೂ ಮಾನಸಿಕ ತಜ್ಞರನ್ನು ಭೇಟಿಯಾಗಲು ಹಿಂದೇಟು ಹಾಕಿ ತಮ್ಮ ರೋಗ ಉಲ್ಬಣಗೊಳ್ಳುವುದಕ್ಕೆ ತಾವೇ ಕಾರಣರಾಗುತ್ತಾರೆ, ಅಂಥವರಿಗೆ ಮಾರ್ಗದರ್ಶನ ನೀಡುವಂಥ ಒಂದು ಕೃತಿಯಿದು. ಕೃತಿಯ ವಸ್ತು ಪ್ರಸ್ತುತತೆಯುಳ್ಳದ್ದಾಗಿದೆ. ಭಾಷೆ, ನಿರೂಪಣಾ ಶೈಲಿಗಳು ಸರಳವೂ ಸುಲಲಿತವೂ ಆಗಿದ್ದು ಸರಾಗವಾಗಿ ಓದಿಸಿಕೊಂಡು ಹೋಗುತ್ತದೆ. ******************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ
ದೇಗುಲದಲ್ಲಿ ದೆವ್ವ
ಮೂಲ : ಗೂಗಿ ವಾ ಥಿಯಾಂಗೋ ಕನ್ನಡಕ್ಕೆ : ಬಂಜಗೆರೆ ಜಯಪ್ರಕಾಶ್
You cannot copy content of this page