ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ದಂಗೆಯ ದಿನಗಳುಇಂಗ್ಲಿಷ್ ಮೂಲ : ಮನೋಹರ ಮಳಗಾಂವ್‌ಕರ್ ಕನ್ನಡಕ್ಕೆ : ರವಿ ಬೆಳಗೆರೆಪ್ರ : ಭಾವನಾ ಪ್ರಕಾಶನಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೮೫ಪುಟಗಳು : ೩೦೪ ಪ್ರಸಿದ್ಧ ಭಾರತೀಯ ಆಂಗ್ಲ ಲೇಖಕ ಮನೋಹರ ಮಳಗಾಂವ್‌ಕರ್ ಅವರ ಐತಿಹಾಸಿಕ ಕಾದಂಬರಿಯ ಅನುವಾದವಿದು. ಬ್ರಿಟಿಷರು ಭಾರತವನ್ನು ಆಕ್ರಮಿಸಿಕೊಂಡ ನಂತರ ಈಸ್ಟ್ ಇಂಡಿಯಾ ಕಂಪೆನಿಯು ವ್ಯಾಪಾರದ ಹೆಸರಿನಲ್ಲಿ ಭಾರತದ ಒಂದೊಂದೇ ರಾಜ್ಯಗಳನ್ನು ಕಬಳಿಸಿಯಾದ ಮೇಲೆ ಭಾರತೀಯರನ್ನು ಹಿಂಸಿಸ ತೊಡಗಿದಾಗ ಅವರ ವಿರುದ್ಧ ಸೇಡು ತೀರಿಸಿ ಅವರನ್ನು ಭಾರತದಿಂದ ಹೊಡೆದೋಡಿಸಲು ೧೮೫೭ರಲ್ಲಿ ನಡೆಸಿದ ಐತಿಹಾಸಿಕ ‘ಮೊದಲ ಸ್ವಾತಂತ್ರ್ಯ ಸಮರ’ದ ಸಂದರ್ಭದಲ್ಲಿ ಸಂಭವಿಸಿದ ಘಟನಾವಳಿಗಳ ಆರ್ದ್ರ ಚಿತ್ರಣ ಇಲ್ಲಿದೆ. ಸಮರದ ಪ್ರಮುಖ ರೂವಾರಿಯಾಗಿ ಕಾರ್ಯ ನಿರ್ವಹಿಸಿದ ನಾನಾ ಸಾಹೇಬನೇ ಇಡೀ ಕಾದಂಬರಿಯ ಕಥನ ಕ್ರಿಯೆಯ ನಿರೂಪಕನಾಗಿದ್ದಾನೆ. ಆಗ ಭಾರತದ ಬಹು ದೊಡ್ಡ ಭಾಗವನ್ನು ಆಳುತ್ತಿದ್ದ ಮರಾಠಾ ಸಾಮ್ರಾಜ್ಯದ ಎರಡನೇ ಪೇಶ್ವೆ ಬಾಜಿರಾಯನ ದತ್ತು ಪುತ್ರ ನಾನಾಸಾಹೇಬ ವಿಶಾಲ ಮನೋಭಾವದ ಸಂವೇದನಾಶೀಲ ವ್ಯಕ್ತಿ. ಇಂಗ್ಲಿಷ್ ವಿದ್ಯಾಭ್ಯಾಸ ಪಡೆದು ಸುಸಂಸ್ಕೃತ ವ್ಯಕ್ತಿಯಾಗಿ ರೂಪುಗೊಂಡ ನಾನಾಸಾಹೇಬನಿಗೆ ಬ್ರಿಟಿಷರು ಮತ್ತು ಭಾರತೀಯರ ನಡುವೆ ಸೌಹಾರ್ದಯುತ ಸಂಬಂಧ ನೆಲೆಗೊಳ್ಳಬೇಕೆಂಬ ಹಂಬಲ. ಆದರೆ ಅವನ ತಂದೆಯ ಕಾಲದಲ್ಲೇ ಅವರ ಮನೆತನಕ್ಕಿದ್ದ ಪೇಶ್ವೆಯೆಂಬ ಬಿರುದನ್ನೂ ವಿಶಾಲವಾದ ರಾಜ್ಯವನ್ನೂ ಕಸಿದುಕೊಂಡು ಅಂಥೋರವೆಂಬ ಚಿಕ್ಕ ಪ್ರದೇಶದ ಒಡೆತನವನ್ನು ಮಾತ್ರ ಬ್ರಿಟಿಷರು ಅವರಿಗೆ ಉಳಿಸಿಕೊಟ್ಟದ್ದು ನಾನಾಸಾಹೇಬನ ಅಸಮಾಧಾನಕ್ಕೆ ಕಾರಣವಾಗುತ್ತದೆ. ಇದು ಅವನ ಬದುಕನ್ನು ಬರಿಯ ಹೋರಾಟವನ್ನಾಗಿಸುತ್ತದೆ. ಈ ಕಾದಂಬರಿಯಲ್ಲಿ ಕೇವಲ ಐತಿಹಾಸಿಕ ಘಟನೆಗಳ ನಿರೂಪಣೆ ಮಾತ್ರವಲ್ಲದೆ ಹಲವು ಪ್ರಮುಖ ಪಾತ್ರಗಳ ಸೃಜನಶೀಲ ಚಿತ್ರಣವಿದೆ. ನಾನಾಸಾಹೇಬನ ಮನೋಭೂಮಿಕೆಯಲ್ಲಿ ನಡೆಯುವ ಎಲ್ಲ ವ್ಯಾಪಾರಗಳ ವಿವರಣೆಯಿದೆ. ದೇಶಭಕ್ತಿ ಮತ್ತು ಧಾರ್ಮಿಕ ದ್ವೇ಼ಷದ ಜ್ವಾಲೆಗಳಿಗಿಂತಲೂ ಮನುಷ್ಯ ಸಂಬಂಧಗಳನ್ನು ಅರ್ಥಪೂರ್ಣವಾಗಿ ಬೆಸೆಯುವುದೇ ಹೆಚ್ಚು ಮಹತ್ವದ ಕೆಲಸವೆಂಬುದನ್ನು ತನ್ನ ಮಾತು, ಯೋಚನೆ ಮತ್ತು ಕೃತಿಗಳ ಮೂಲಕ ತೋರಿಸಿ ಕೊಡುವ ನಾನಾಸಾಹೇಬ ಓರ್ವ ಆದರ್ಶ ವ್ಯಕ್ತಿಯಾಗಿ ನಮ್ಮ ಮುಂದೆ ಬಂದು ನಿಲ್ಲುತ್ತಾನೆ. ಆತನ ವ್ಯಕ್ತಿತ್ವದಲ್ಲಿ ಅಡಕವಾಗಿರುವ ಸದ್ಗುಣಗಳು ಮತ್ತು ಸದಾಚಾರಗಳು ನಮ್ಮ ಮೆಚ್ಚುಗೆಯನ್ನು ಪಡೆಯುತ್ತವೆ ಮಾತ್ರವಲ್ಲದೆ ರಾಜ ಮನೆತನದ ಅನೇಕರಲ್ಲಿರುವ ಲೈಂಗಿಕ ದೌರ್ಬಲ್ಯಗಳ ಬಗ್ಗೆ ಮುಚ್ಚುಮರೆಯಿಲ್ಲದೆ ಹೇಳುವ ನಾನಾಸಾಹೇಬನ ಕಥನವು ಒಂದು ಆತ್ಮ ನಿವೇದನೆಯಂತಿದೆ.ವಸಾಹತೀಕರಣದ ಕಾಲದಲ್ಲಿ ಭಾರತೀಯರು ಅನುಭವಿಸಿದ ಸಂಕಷ್ಟಗಳ ಯಥಾವತ್ತಾದ ಚಿತ್ರಣವೀಯುವ ಈ ಕಾದಂಬರಿ ದಾಖಲೆಯ ದೃಷ್ಟಿಯಿಂದ ಅತ್ಯಂತ ಪ್ರಸ್ತುತವಾಗಿದೆ. ರವಿ ಬೆಳಗೆರೆಯವರ ಅನುವಾದದ ಶೈಲಿಯು ಸುಂದರವೂ ಹೃದ್ಯವೂ ಆಗಿದ್ದು ಸರಾಗವಾಗಿ ಓದಿಸಿಕೊಂಡು ಹೋಗುತ್ತದೆ. ************************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಋಗ್ವೇದ ಸ್ಫುರಣ ಅನುವಾದ : ಹೆಚ್.ಎಸ್.ವೆಂಕಟೇಶಮೂರ್ತಿ ಋಗ್ವೇದ ಸ್ಫುರಣಅನುವಾದ : ಹೆಚ್.ಎಸ್.ವೆಂಕಟೇಶಮೂರ್ತಿಪ್ರ : ಅಭಿನವ ಪ್ರಕಟಣೆಯವರ್ಷ : ೨೦೧೭ಬೆಲೆ : ರೂ.೨೦೦ಪುಟಗಳು : ೧೬೦ ಪ್ರಾಚೀನ ಭಾರತದ ಅತ್ಯಂತ ಪ್ರಮುಖ ಭಾಷಿಕ ದಾಖಲೆಯಾದ ಋಗ್ವೇದ ಸೂಕ್ತಗಳಲ್ಲಿರುವ ಋಕ್ಕುಗಳೊಳಗಿನ ಬಿಡಿ ಪದ್ಯಗಳ  ಸರಳ ಅನುವಾದ ಈ ಕೃತಿಯಲ್ಲಿದೆ.  ಮೂಲ ಸಂಸ್ಕೃತದಲ್ಲಿರುವ ಈ ಪದ್ಯಗಳನ್ನು  ಆರಂಭದಲ್ಲಿ ಸೂಕ್ತ ವ್ಯಾಖ್ಯಾನಗಳ ಮೂಲಕವೂ ನಂತರ ತಿಳಿಗನ್ನಡದಲ್ಲಿ ವ್ಯಾಖ್ಯಾನಗಳಾಗಿಯೂ ನೀಡಲಾಗಿದೆ.  ಋಗ್ವೇದದ ಋಕ್ಕುಗಳು ಪ್ರಕೃತಿಯ ಮಹಾಶಕ್ತಿಗಳು.  ವಾಸ್ತವದ ನೆಲೆಯಲ್ಲಿ ಗ್ರಹಿಸುವಂಥವು.  ವಿಶ್ವಭ್ರಾತೃತ್ವವನ್ನು ಪ್ರೇರಿಸುವ  ಭಾರತೀಯ ಸಂಸ್ಕೃತಿಗೆ ಋಗ್ವೇದವು ಉಗಮ ಸ್ಥಾನ.  ಉಪನಿಷತ್ತುಗಳಲ್ಲಿ ವಿಸ್ತೃತವಾಗಿ ಚರ್ಚಿತವಾಗಿರುವ ಅದ್ವೈತ ತತ್ವವು  ಮೊದಲು ಕಾಣಿಸಿದ್ದು ಋಗ್ವೇದದಲ್ಲಿ.  ಪರಸ್ಪರ ಪ್ರೀತಿ-ಪೋಷಣೆಗಳು ಜಗತ್ತಿನ ಕಲ್ಯಾಣಕ್ಕೆ ಅಗತ್ಯ ಮತ್ತು ವಿಶ್ವ ಸಾಮರಸ್ಯವೇ ತಮ್ಮ ಏಕೈಕ ಗುರಿ ಎಂದು ತಿಳಿದವರು ವೇದಕಾಲದ ಋಷಿಗಳು.  ಕೇವಲ ಮಾನವನ ಸುಖವಲ್ಲ ವಿಶ್ವ ನಿಯಮದ ಗುರಿ.  ಬದಲಾಗಿ ಅದು ಸಕಲ ಚರಾಚರ ಜೀವಿಗಳು ಅಪ್ರತಿಹತವಾದ ಋತದ ಮೂಲಕ ಪಡೆಯುವ  ಆನಂದವಾಗಿದೆ. ಈ ವಿಶ್ವದಲ್ಲಿ ಗೆಲ್ಲುವುದು ಋತವೊಂದೇ.  ಅನೃತವಲ್ಲವೆಂದು ಋಗ್ವೇದ ಹೇಳುತ್ತದೆ.  ಈ ಋತಕ್ಕೆ ಯಾವುದು ಅಡ್ಡ ನಿಲ್ಲುತ್ತದೆಯೋ ಅದು ಆಸುರೀ ಶಕ್ತಿ. ಅಂಥ ಶಕ್ತಿಗಳ ವಿರುದ್ಧ ವೇದಕಾಲದ ಋಷಿಗಳು ಅನವರತ ಹೋರಾಡಿದರು.     ಋಗ್ವೇದ ಸ್ಫುರಣದಲ್ಲಿ ಎರಡು ಭಾಗಗಳಿವೆ. ಮೊದಲ ಭಾಗದಲ್ಲಿ ಆಯ್ದ ಸೂಕ್ತಗಳ ಕನ್ನಡ ರೂಪದ ಜತೆಗೆ ಸರಳ ವ್ಯಾಖ್ಯಾನಗಳ ಮೂಲಕ ಚಿಕ್ಕ ಮಕ್ಕಳಿಗೂ ಅರ್ಥವಾಗುವಂಥ ವಿವರಣೆಗಳಿವೆ. ಎರಡನೆಯ ಭಾಗದಲ್ಲಿ ಬೇರೆ ಬೇರೆ ಸಂದರ್ಭಗಳನ್ನು ಸೂಚಿಸುವಂಥ ಬಿಡಿ ಕವಿತೆಗಳಿವೆ.  ವೇದಕಾಲದಲ್ಲಿ ಜನಜೀವನ ಹೇಗಿತ್ತು,  ಸಾಮಾಜಿಕ ರೀತಿ-ನೀತಿಗಳು ಮತ್ತು ಪದ್ಧತಿ-ಪರಂಪರೆಗಳು ಹೇಗಿದ್ದವು ಎಂಬುದರ ಚಿತ್ರಣವನ್ನು ಈ ಕವಿತೆಗಳು ನೀಡುತ್ತವೆ. ಯುದ್ಧಭೂಮಿಯಲ್ಲಿ ಯೋಧನ ಚಿತ್ರ, ಮುಪ್ಪು ಮತ್ತು ಮರಣ, ದಾಂಪತ್ಯ ತತ್ವ, ಮಳೆಗಾಲದಲ್ಲಿ ಕಪ್ಪೆಗಳು, ಕಳೇಬರವನ್ನು ಕುರಿತು, ಪತಿಯನ್ನು ಕಳೆದುಕೊಂಡ ಪತ್ನಿ, ಕಸಬುಗಾರಿಕೆ,  ಕಾಳ್ಗಿಚ್ಚು, ಸವತಿ ಸಂಬಂಧ, ಶ್ರದ್ಧೆ ಮೊದಲಾದ ಕವಿತೆಗಳ ವಸ್ತುವನ್ನು ನೋಡಿದರೆ ಅವು ಆಧುನಿಕ ಕವಿತೆಗಳಿಗಿಂತ ಭಿನ್ನವಾಗಿ ಕಾಣುವುದಿಲ್ಲ.  ವೇದಕಾಲದ ಸಾಮಾಜಿಕ ಚಿಂತನೆಗಳು, ಎಷ್ಟರ ಮಟ್ಟಿಗೆ ಜೀವಪರವಾಗಿದ್ದವು ಎಂಬುದನ್ನು ಈ ಕವಿತೆಗಳು ನಿರೂಪಿಸುತ್ತವೆ.     ಕಾವ್ಯದ ಅನುವಾದಕ್ಕೆ ವಿಶೇಷ ಮಹತ್ವವಿದೆ. ಮೂಲದ ಛಂದಸ್ಸನ್ನೂ ಅಲಂಕಾರಗಳನ್ನೂ ಅರ್ಥಪೂರ್ಣವಾಗಿ ಉಳಿಸಿಕೊಳ್ಳುವುದು ಅನುವಾದಕರ ಸೃಜನಶಕ್ತಿಗೆ ಒಂದು ಬಹಳ ದೊಡ್ಡ ಸವಾಲು. ಇಲ್ಲಿ ಅನುವಾದಕರೂ ಸ್ವತಃ ಅನುಭವಿ ಕವಿಗಳೂ ಆದ ಹೆಚ್.ಎಸ್.ಆರ್. ಅವರು ಈ ಸವಾಲನ್ನು ಗೆಲ್ಲುವಲ್ಲಿ ಅದ್ಭುತ ಯಶಸ್ಸನ್ನು ಸಾಧಿಸಿದ್ದಾರೆ.  ಅನುವಾದಿತ ಕವಿತೆಗಳನ್ನೂ ಭಾವಗೀತೆಗಳಾಗಿ ಹಾಡುವಷ್ಟು ಛಂದೋಬದ್ಧವಾಗಿ ಕಟ್ಟಿಕೊಟ್ಟಿದ್ದಾರೆ. ********************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ದಿ ಲಾಸ್ಟ್ ಲೆಕ್ಚರ್ ದಿ ಲಾಸ್ಟ್ ಲೆಕ್ಚರ್ ( ಆತ್ಮ ಕಥನ ರೂಪದ ಉಪನ್ಯಾಸಗಳು)ಮೂಲ : ರ‍್ಯಾಂಡಿ ಪಾಶ್ ಕನ್ನಡಕ್ಕೆ : ಎಸ್.ಉಮೇಶ್ಪ್ರ : ಧಾತ್ರಿ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೦೦ಪುಟಗಳು : ೧೯೩ ಮೂಲಕೃತಿಯ ಅದ್ಭುತ ಜನಪ್ರಿಯತೆಯಿಂದಾಗಿ ಕನ್ನಡಕ್ಕೂ ಬಂದು ಕನ್ನಡದಲ್ಲೂ ಮಾರಾಟ ಮತ್ತು ಜನಪ್ರಿಯತೆಗಳ ದೃಷ್ಟಿಯಿಂದ ಅಪಾರ ಯಶಸ್ಸು ಪಡೆದ ಕೃತಿಯಿದು. ಮೂಲ ಲೇಖಕ ರ‍್ಯಾಂಡಿ ಪಾಶ್ ಜಠರದ ಕ್ಯಾನ್ಸರಿನಿಂದ ಪೀಡಿತನಾಗಿ ಇನ್ನು ಕೆಲವೇ ತಿಂಗಳುಗಳಷ್ಟೇ ಬದುಕುವನೆಂದು ವೈದ್ಯಕೀಯ ವರದಿ ಬಂದಾಗ ಅಮೆರಿಕಾದ ಕಾರ್ನಿಗಿ ಮೆಲನ್ ವಿಶ್ವವಿದ್ಯಾನಿಲಯದವರು ಆತನ ಅಂತಿಮ ಉಪನ್ಯಾಸಕ್ಕೆ ಒಂದು ಅವಕಾಶ ಮಾಡಿಕೊಡುತ್ತಾರೆ. ಆ ಸಂದರ್ಭದಲ್ಲಿ ರ‍್ಯಾಂಡಿ ಪಾಶ್ ಒಂದು ಗಂಟೆ ಕಾಲ ತನ್ನ ಬಾಲ್ಯದ ಕನಸುಗಳು, ಅನುಭವಗಳು, ಘಟನೆಗಳು, ತನ್ನ ತಂದೆ ತಾಯಿಗಳ ಉದಾತ್ತ ಗುಣಗಳು, ಅವರೊಂದಿಗಿನ ಕೌಟುಂಬಿಕ ಬದುಕಿನಲ್ಲಿ ತಾನು ಅನುಭವಿಸಿದ ಸಂತಸ, ವಿಶ್ವವಿದ್ಯಾನಿಲಯದಲ್ಲಿ ಪ್ರೊಫೆಸರ್ ಆಗಿ ತಾನು ಮಾಡಿದ ಕೆಲಸಗಳು, ವಿದ್ಯಾರ್ಥಿಗಳಿಗೆ ನೀಡಿದ ಮಾರ್ಗದರ್ಶನ, ಜೈ ಎಂಬ ಹೆಣ್ಣನ್ನು ತನ್ನ ೩೭ನೆಯ ವಯಸ್ಸಿನಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಆಕೆಯೊಂದಿಗಿನ ಸಂತಸಭರಿತ ದಾಂಪತ್ಯ ಜೀವನ, ಮೂವರು ಎಳೆಯ ಮಕ್ಕಳಾದ ಡೈಲಾ, ಲೋಗನ್ ಮತ್ತು ಛೋಲೆಯೊಂದಿಗಿನ ಸುಂದರ ಸಾಂಸಾರಿಕ ಬದುಕು, ತನ್ನ ಮಕ್ಕಳಿಗೆ ಆದರ್ಶ ತಂದೆಯಾಗಲು ಆತ ಪಟ್ಟ ಶ್ರಮ, ಕ್ಯಾನ್ಸರ್ ಇದೆ ಎಂಬುದು ತಿಳಿದಾಗ ಉಂಟಾದ ಆಘಾತ, ತಳಮಳ ಮತ್ತು ತಲ್ಲಣ, ಪ್ರೀತಿಸುವ ಹೆಂಡತಿಯನ್ನು ನಡು ನೀರಿನಲ್ಲಿ ಕೈ ಬಿಟ್ಟು ಹೋಗಬೇಕಲ್ಲ ಎಂಬ ನೋವು, ಆದರೂ ತಾನಿಲ್ಲದ ಕೊರತೆ ಮಕ್ಕಳನ್ನು ಕಾಡಬಾರದು ಎಂಬ ಕಾಳಜಿಯಿಂದ ಅವರೊಂದಿಗೆ ಖುಷಿಯಿಂದ ಆಡಿದ ಎಲ್ಲ ಕ್ಷಣಗಳನ್ನೂ ವೀಡಿಯೋದಲ್ಲಿ ಸೆರೆ ಹಿಡಿದದ್ದು-ಹೀಗೆ ಹಲವಾರು ವೈಯಕ್ತಿಕ ಸಂಗತಿಗಳನ್ನು ಕುರಿತು ತಮ್ಮ ಉಪನ್ಯಾಸದಲ್ಲಿ ವಿಸ್ತರಿಸುತ್ತಾರೆ. ಲೇಖಕರ ಆತ್ಮಕಥನದ ರೀತಿಯಲ್ಲಿರುವ ಈ ಎಲ್ಲ ಮಾತುಗಳು ಈ ಕೃತಿಯಲ್ಲಿ ದಾಖಲಿಸಲ್ಪಟ್ಟಿವೆ. ಆತನ ಒಂದೊಂದು ಮಾತುಗಳೂ ಅವುಗಳಲ್ಲಿ ಕಾಣುವ ತಾತ್ವಿಕ ಮೌಲ್ಯಗಳಿಂದ ಬೆರಗು ಹುಟ್ಟಿಸುತ್ತವೆ. ಸಾವನ್ನು ಗಟ್ಟಿ ಮನಸ್ಸಿನಿಂದ ಎದುರಿಸಿ ತಾನು ತೊರೆದು ಹೋಗುತ್ತಿರುವ ಕುಟುಂಬಕ್ಕೆ ತನ್ನ ಅಗಲುವಿಕೆಯಿಂದ ಯಾವ ತೊಂದರೆಯೂ ಆಗಬಾರದೆಂದು ಅವರೆಲ್ಲರನ್ನೂ ಮಾನಸಿಕವಾಗಿ ಸಿದ್ಧಪಡಿಸುವ ರ‍್ಯಾಂಡಿಪಾಶರವರ ಧೈರ್ಯ ಮತ್ತು ಆತ್ಮವಿಶ್ವಾಸಗಳು ಅಪ್ರತಿಮವಾಗಿವೆ. ಹಾಗೆಯೇ ಆತನ ಪರಿಸ್ಥಿತಿಯ ಚಿತ್ರಣವು ಮನಕದಡುತ್ತದೆ. ಸ್ವತಃ ಲೇಖಕರೇ ಸಾವನ್ನೆದುರಿಸುವ ಸಂದರ್ಭದಲ್ಲಿ ನೀಡಿದ ಅಂತಿಮ ಉಪನ್ಯಾಸದಲ್ಲಿ ಮಂಡಿಸಿದ ವಿಚಾರಗಳು ಸಾರ್ವಕಾಲಿಕ ಸತ್ಯಗಳಾಗಿದ್ದು ಸಾವು ಸನ್ನಿಹಿತವಾದ ವ್ಯಕ್ತಿಯ ದಿಟ್ಟ ಮನೋಭಾವವನ್ನು ಬಹಳ ಸುಂದರವಾಗಿ ಚಿತ್ರಿಸುತ್ತದೆ. ಎಸ್.ಉಮೇಶ್ ಅವರ ಅನುವಾದ ಸರಳವಾಗಿದ್ದು ನಯವಾಗಿ ಓದಿಸಿಕೊಂಡು ಹೋಗುತ್ತದೆ. ************************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಹುಣಿಸೆ ಮರದ ಕತೆ ಹುಣಿಸೆ ಮರದ ಕತೆತಮಿಳು ಮೂಲ : ಸುಂದರ ರಾಮಸ್ವಾಮಿಅನುವಾದ : ಕೆ.ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೫೦ಪುಟಗಳು : ೧೯೨   ಪರಿಸರ ಕಾಳಜಿಯನ್ನು ಹೊಂದಿದ ಒಂದು ವಿಶಿಷ್ಟ ಕಾದಂಬರಿಯಿದು. ಅದೊಂದು ಪುಟ್ಟ ಹಳ್ಳಿಯಲ್ಲಿ, ಮೂರು ರಸ್ತೆ ಕೂಡುವ ಸ್ಥಳದಲ್ಲಿ  ಆ ಹುಣಿಸೆ ಮರವಿತ್ತು.  ಆ ಜಾಗ ಜನರ ಓಡಾಟ-ಗಿಜಿ ಗಿಜಿಗಳಿಂದ ತುಂಬಿ ಲವಲವಿಕೆಯಿಂದ ಕೂಡಿತ್ತು. ತನ್ನಷ್ಟಕ್ಕೆ ಹುಟ್ಟಿಕೊಂಡ ಆ ಹುಣಿಸೆ  ಮರವು ಮಾನವನ ಲೆಕ್ಕವಿಲ್ಲದ ಆಟಗಳಿಗೆ ಮೂಕ ಸಾಕ್ಷಿಯಾಗಿ  ಮನುಷ್ಯನ ಸುಖ-ದುಖ, ಸ್ವಾರ್ಥ-ತ್ಯಾಗ, ಪ್ರೀತಿ-ದ್ವೇಷ-ಅಸೂಯೆಗಳನ್ನು ಮೌನವಾಗಿ ಗಮನಿಸುತ್ತಿತ್ತು. ಮನುಷ್ಯರಿಗಾಗಿ ಎಲೆ ಚಿಗುರಿಸಿ, ಹೂ ಬಿಟ್ಟು, ಕಾಯಿಗಳನ್ನು ಕೊಡುತ್ತಿತ್ತು. ಎತ್ತರೆತ್ತರಕ್ಕೆ ಬೆಳೆಯುತ್ತ ಹೋದ ಅದರ ಕೊಂಬೆಗಳು ಬಾನಿಗೂ ಬೇರುಗಳು ಮಣ್ಣಿನೊಳಗಣ ಆಳಕ್ಕೂ ಚಾಚಿಕೊಂಡವು.  ಆದರೆ, ದೇಶವನ್ನೂ ಹಣವನ್ನೂ ಸ್ತ್ರೀ ಯರನ್ನೂ  ಅಧಿಕಾರವನ್ನೂ ಹಿರಿಮೆಯನ್ನೂ ಅಂಕೆಯಲ್ಲಿರಿಸಿಕೊಂಡು ಆಟ ಆಡಿದ ಮನುಷ್ಯ ಅದನ್ನು ಪಗಡೆಯ ಕಾಯಿಯಾಗಿಸಿ ಉರುಳಿಸಿದ ಪರಿಣಾಮವಾಗಿ ಆ ವೃಕ್ಷ ನಾಶವಾಯಿತು. ದಾಮೋದರ ಆಸಾನ್ ಎಂಬ ತತ್ವಜ್ಞಾನಿಯು ವೇದಾಂತಿಯಂತೆ ಮಾತನಾಡುತ್ತ ಆ ಹುಣಿಸೆ ಮರದ ಕಥೆಯನ್ನು ಕಾದಂಬರಿಯ ನಿರೂಪಕನಿಗೆ ಹೇಳುತ್ತ ಹೋಗುತ್ತಾನೆ.  ಹುಣಿಸೆ ಮರ ಹಿಂದೆ ಇದ್ದದ್ದು ಒಂದು ದೊಡ್ಡ ಕೊಳದ ನಡುವೆ. ಜನರು ಅದನ್ನು ಪುಳಿಕೊಳ ಅನ್ನುತ್ತಿದ್ದರು. ಅದರ ಸುತ್ತ ಹುಟ್ಟಿಕೊಂಡಿದ್ದ ಕಥೆಯನ್ನು ದಾಮೋದರ ಆಸಾನ್ ನಿರೂಪಕನಿಗೆ ಹೇಳುತ್ತಾನೆ. ಸೆಲ್ಲತ್ತಾಯಿ ಎಂಬವಳು ಆ ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಯಾರೋ ಒಬ್ಬ ಅತಿಮಾನುಷ ಶಕ್ತಿಯನ್ನು ಹೊಂದಿದ್ದ ವ್ಯಕ್ತಿ ಅವಳನ್ನು ಎತ್ತಿಕೊಂಡು ಕಾಡೊಳಗೆ ಒಯ್ದಿದ್ದ.  ಅವನನ್ನು ಹಿಡಿಯಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.  ಆ ವ್ಯಕ್ತಿಯಿಂದ ಸೆಲ್ಲತ್ತಾಯಿ ವಶೀಕರಣಕ್ಕೊಳಗಾಗಿ ಆತನ ಧ್ಯಾನದಲ್ಲೇ ಕಳೆಯುತ್ತ ಕೊನೆಗೆ ಅದೇ ಹುಣಿಸೆಮರಕ್ಕೆ ನೇತಾಡಿ ಸತ್ತು ಹೋದಳು. ಆಸಾನ್ ಹೇಳಿದ ಇನ್ನೊಂದು ಕಥೆ ಒಬ್ಬ ರಾಜನದ್ದು. ರಾಜ ಆ ಊರನ್ನು ಸಂದರ್ಶಿಸುತ್ತಾನೆಂದು ಇಡೀ ಊರನ್ನು ಅಲಂಕರಿಸಿ ಸಿದ್ಧ ಪಡಿಸಿದ ಜನರು ಪುಳಿಕ್ಕೊಳವನ್ನು ಮಾತ್ರ ಸ್ವಚ್ಛಗೊಳಿಸದೆ ಹಾಗೆಯೇ ಬಿಟ್ಟರು.  ಪರಿಣಾಮವಾಗಿ ಅದರೊಳಗಿಂದ ಬಂದ ದುರ್ವಾಸನೆಯು ರಾಜನನ್ನು ಅಸಮಾಧಾನಗೊಳಿಸುತ್ತದೆ. ಅದನ್ನು ಗಮನಿಸಿದ ಅಧಿಕಾರಿಗಳು ಭಯಗೊಂಡು ರಾಜನ ಕ್ಷಮೆ ಬೇಡುತ್ತಾರೆ.  ಆದರೆ ರಾಜನು ಅವರನ್ನು ಕ್ಷಮಿಸದೆ ಕೆಲಸದಿಂದ ವಜಾ ಮಾಡುತ್ತಾನೆ. ಆದರೆ ರಾಜನು ತನ್ನ ಅರಮನೆಗೆ ಮರಳುವ ಯಾತ್ರೆಯ ಸಂದರ್ಭದಲ್ಲಿ ಊರವರೆಲ್ಲ ಒಟ್ಟಾಗಿ ಆ ಪುಳಿಕ್ಕೊಳದ ಪಕ್ಕವಿದ್ದ ಎತ್ತರದ ಪರೈಯನ್ ಗುಡ್ಡವನ್ನು ಕಡಿದು ನೆಲಸಮ ಮಾಡಿ ಆ ಮಣ್ಣನ್ನು ಪುಳಿಕ್ಕೊಳಕ್ಕೆ ತುಂಬಿಸಿ, ಕೊಳವನ್ನು ಮುಚ್ಚಿ, ಆ ಜಾಗದಲ್ಲಿ, ಉದ್ಯಾನವನ್ನು ನಿರ್ಮಿಸಿ ಅಲಂಕರಿಸಿ ಸುಂದರವಾಗಿಸುತ್ತಾರೆ. ಮುಂದೆ ಊರು ಒಂದು ಪಟ್ಟಣವಾಗಿ ಹುಣಸೆ ಮರವಿದ್ದ ಜಾಗದಲ್ಲಿ ಮೂರು ರಸ್ತೆಗಳು ಕೂಡಿ, ಅದಕ್ಕೆ ಹುಣಸೆಮರ ಜಂಕ್ಷನ್ ಎಂದು ಹೆಸರಾಗುತ್ತದೆ. ಮುಂದೊಂದು ದಿನ ಆ ಹುಣಿಸೆ ಬುಡಕ್ಕೂ ಕೊಡಲಿ ಹಾಕಿ ’ಒಬ್ಬ ಸುಮಂಗಲಿಯ ತಿಲಕವನ್ನು ಅಳಿಸಿದಂತೆ’ ಆ ಜಾಗವನ್ನು ಬೋಳಾಗಿಸುತ್ತಾರೆ. ಸ್ವಾರ್ಥಿಯಾದ ಮನುಷ್ಯನು ತನ್ನ ಸ್ವಂತ ಲಾಭಕ್ಕೋಸ್ಕರ ಆಧುನಿಕತೆ-ಅಭಿವೃದ್ಧಿ- ಪ್ರಗತಿಗಳ ಹೆಸರಿನಲ್ಲಿ ಪರಿಸರ ನಾಶ ಮಾಡುವ ವೈರುದ್ಧ್ಯದತ್ತ ಈ ಕಾದಂಬರಿಯು ಬೊಟ್ಟು ಮಾಡಿ ತೋರಿಸುತ್ತದೆ.  ಹುಣಿಸೆ ಮರದ ರೂಪಕದ ಮೂಲಕ ಆಡಳಿತಾರೂಢ ಅಧಿಕಾರಿಗಳ ರಾಜಕೀಯದ ವ್ಯಂಗ್ಯ ಚಿತ್ರಣವನ್ನು ಕಾದಂಬರಿ ನೀಡುತ್ತದೆ.  ಒಂದು ಒಳ್ಳೆಯ ಕಾದಂಬರಿಯನ್ನು ಕನ್ನಡಕ್ಕೆ ನೀಡಿದ ಹಿರಿಮೆ ನಲ್ಲತಂಬಿಯವರದ್ದಾಗಿದೆ. *********************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಅಲೆಯ ಮೊರೆತ ಅಲೆಯ ಮೊರೆತ( ಕಾದಂಬರಿ)ತಮಿಳು ಮೂಲ : ಕಲ್ಕಿಅನುವಾದ : ಶಶಿಕಲಾ ರಾಜಪ್ರ : ಸಾಹಿತ್ಯ ಅಕಾಡೆಮಿಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೪೨೦ಪುಟಗಳು : ೬೯೨ ವಾಸ್ತವವಾದಿ ಶೈಲಿಯಲ್ಲಿರುವ ಈ ಕಾದಂಬರಿಯು ಒಂದು ಕಾಲ್ಪನಿಕ ಕಥೆಯನ್ನು ವಸ್ತುವಾಗಿ ಹೊಂದಿದ್ದರೂ  ಭಾರತಕ್ಕೆ ಸ್ವಾತಂತ್ರ್ಯ   ಸಿಗುವ ಮೊದಲು ನಡೆದ ಎಲ್ಲ ಸಂಗತಿಗಳನ್ನೂ ಐತಿಹಾಸಿಕ ಸತ್ಯಗಳೊಂದಿಗೆ ಯಥಾವತ್ತಾಗಿ ನಿರೂಪಿಸುತ್ತದೆ.         ಪಟ್ಟಾಮಣಿಯಮ್ ಕಿಟ್ಟಾವಯ್ಯರ್, ಸರಸ್ವತಿ ಅಮ್ಮಾಳ್, ಪದ್ಮಾಚಲ ಶಾಸ್ತಿç ಅಯ್ಯರ್, ಕಾಮಾಕ್ಷಿ ಅಮ್ಮಾಳ್, ದೊರೆಸ್ವಾಮಿ ಅಯ್ಯರ್, ರಾಜಮ್ಮ, ಲಲಿತಾ, ಸೀತಾ, ಸೌಂದರ್ ರಾಜನ್, ಸೂರ್ಯ, ಪಟ್ಟಾಭಿರಾಮನ್, ಧಾರಿಣಿ, ಅಮರನಾಥ, ಚಿತ್ರಾ ಮೊದಲಾದವು ಇಲ್ಲಿ ಎದ್ದು ಕಾಣುವ ಪಾತ್ರಗಳು. ಇವರೆಲ್ಲರ ವೈಯಕ್ತಿಕ ಹಾಗೂ  ಕೌಟುಂಬಿಕ ಬದುಕಿನ ವಿವರಗಳು , ಗ್ರಾಮೀಣ ಹಾಗೂ ನಗರ ಬದುಕಿನ  ಚಿತ್ರಗಳು, ಸ್ವಾತಂತ್ರ್ಯ  ಹೋರಾಟ, ಬಿಳಿಯರ ಸರಕಾರದ ಆಡಳಿತ ವೃತ್ತಾಂತಗಳು, ಕಾಂಗ್ರೆಸ್ ಮತ್ತು ಸೋಷಲಿಸ್ಟ್  ಸಂಘಟನೆಗಳು ನಡೆಸಿದ ಹೋರಾಟದ ಚಿತ್ರಗಳು ಇಲ್ಲಿವೆ.  ಸರಕಾರದ ದೌರ್ಜನ್ಯದ ವಿರುದ್ಧ ಪ್ರತಿಭಟಿಸುವ ಕ್ರಾಂತಿವೀರ ಯುವಕರು ರಹಸ್ಯವಾಗಿ ನಡೆಸುವ ಸಿದ್ಧತೆಗಳು, ಅವರನ್ನು ಬಂಧಿಸಲು ಪೋಲಿಸರು ನಡೆಸುವ ಪ್ರಯತ್ನಗಳು,  ಬಂಧನ, ಜೈಲುವಾಸ, ಕೈದಿಗಳು ತಪ್ಪಿಸಿಕೊಳ್ಳಲು ಮಾಡುವ ಒದ್ದಾಟಗಳ ಚಿತ್ರಣಗಳಿವೆ.  ಭಾರತದಲ್ಲಿ ಅಸ್ತಿತ್ವದಲ್ಲಿದ್ದ ಸ್ಥಾನೀಯ ರಾಜರುಗಳು ತಮ್ಮ ತಮ್ಮೊಳಗೆ ಕಾದಾಡಿ ಹೊರಗಿನಿಂದ ಮುಸಲ್ಮಾನರೂ ಆಂಗ್ಲರೂ ಬಂದು ಇಲ್ಲಿ ನೆಲೆಯೂರಲು ಕಾರಣರಾದದ್ದು ಹೇಗೆ ಎಂಬ ಬಗ್ಗೆ ಚರ್ಚೆಗಳಿವೆ.  ಮುಸಲ್ಮಾನರ ಆಕ್ರಮಣ, ಆಡಳಿತ ಮತ್ತು ಹಿಂದೂ ಧಾರ್ಮಿಕ ಕೇಂದ್ರಗಳನ್ನು ನಾಶ ಮಾಡಿ ಅವರು ಮಸೀದಿಗಳನ್ನು ಸ್ಥಾಪಿಸಿದ್ದು, ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿ ಅವರನ್ನು ತಮ್ಮ ಜನಾನಾದಲ್ಲಿರಿಸಿಕೊಂಡದ್ದು, ಬಲಾತ್ಕಾರವಾಗಿ ಮತಾಂತರಗೊಳಿಸಿದ ವಿವರಗಳಿವೆ.  ಇವೆಲ್ಲದರ ಜತೆಗೆ ಬ್ರಿಟಿಷರ ದಾಸ್ಯದಿಂದ ಭಾರತವನ್ನು ಬಂಧಮುಕ್ತಗೊಳಿಸಲು ಉಪವಾಸ ಸತ್ಯಾಗ್ರಹ-ಅಹಿಂಸಾ ವ್ರತಗಳ ಮೂಲಕ ಹೋರಾಟ ನಡೆಸಿದ ಗಾಂಧೀಜಿಯವರ ಬಗ್ಗೆ ಇಲ್ಲಿ ಕೆಲವು ಪಾತ್ರಗಳಿಗೆ ಅಪಾರವಾದ ಭಕ್ತ-ಗೌರವಗಳಿದ್ದರೆ ಇನ್ನು ಕೆಲವು ಪಾತ್ರಗಳಿಗೆ ಅವರಿಂದಾಗಿಯೇ ಭಾರತವು ಎರಡು ಹೋಳಾಗಿ ಬಿಟ್ಟಿತು ಎಂಬ ಅಸಮಾಧಾನ ವ್ಯಕ್ತವಾಗಿದೆ.  ಭಾರತಕ್ಕೆ ಸ್ವಾತಂತ್ರ್ಯ ದೊರಕಿದ ಸಂದರ್ಭದಲ್ಲಿ  ಮುಸಲ್ಮಾನರು ಪ್ರತ್ಯೇಕ ರಾಜ್ಯ ಬೇಕೆಂದು ಕೂಗಿದಾಗ  ಗಾಂಧೀಜಿಯವರು ಅವರನ್ನು ತಡೆಯಲಿಲ್ಲ, ಮತ್ತು ಪಾಕಿಸ್ತಾನದಲ್ಲಿ  ಹಿಂದೂಗಳ ಮೇಲೆ ದೌರ್ಜನ್ಯ ನಡೆದು ಲಕ್ಷ ಲಕ್ಷ ಮಂದಿ ಸಾವಿಗೀಡಾದಾಗ  ಗಾಂಧೀಜಿಯವರು ದೆಹಲಿಯಲ್ಲಿ ಪ್ರೇಮ ಬೋಧನೆ ಮಾಡುತ್ತಿದ್ದರು, ದೆಹಲಿಯಲ್ಲಿದ್ದ ಎಲ್ಲ ಹಿಂದೂ ದೇವಾಲಯಗಳನ್ನು ಮುಸಲ್ಮಾನರು ನಾಶಪಡಿಸಿ ಮಸೀದಿ ಕಟ್ಟಿಸಿದ್ದು ನಿಜವೆಂದು ಗೊತ್ತಿದ್ದರೂ ಹಿಂದೂ ನಿರಾಶ್ರಿತರು ದೆಹಲಿಯ ಮಸೀದಿಗಳಲ್ಲಿ ತಾತ್ಕಾಲಿಕ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದಾಗ  ಅವರು ಅದನ್ನು ತಡೆದರು- ಇತ್ಯಾದಿ ಆರೋಪಗಳಿವೆ.     ೬೯೦ ಪುಟಗಳಿರುವ ಈ ಬೃಹತ್ ಕಾದಂಬರಿಯ ಕನ್ನಡ ಅನುವಾದ ಬಹಳ ಸೊಗಸಾಗಿ ಬಂದಿದೆ. ತಮಿಳು ಭಾಷೆಯ ಕೆಲವು ಪದಗಳನ್ನು ಹಾಗೆಯೇ ಉಳಿಸಿಕೊಂಡು ಅವಕ್ಕೆ ಅಡಿ ಟಿಪ್ಪಣಿ ಕೊಟ್ಟದ್ದು ಕನ್ನಡದ ಓದುಗರಿಗೆ ತಮಿಳು ಸಂಸ್ಕೃತಿಯ ಪರಿಚಯ ಮಾಡಿಕೊಳ್ಳುವಲ್ಲಿ  ಉಪಯುಕ್ತವಾಗಿದೆ.  ತಮಿಳಿನ ಕೆಲವು ಗಾದೆ ಮಾತು- ನುಡಿಕಟ್ಟುಗಳಿಗೆ ಸಮಾನಾರ್ಥಕವಾದ ಅಭಿವ್ಯಕ್ತಿಗಳು ಕನ್ನಡದಲ್ಲಿ ಇಲ್ಲದಿದ್ದರೂ ಅವುಗಳನ್ನು ಅಷ್ಟೇ ಪ್ರಾಸಬದ್ಧವಾಗಿ ರಚಿಸಿ ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದು ಸ್ವಾಗತಾರ್ಹ. ಒಟ್ಟಿನಲ್ಲಿ ಇದು ಬಹಳ ಸೃಜನಶೀಲ ಅನುವಾದ. ********************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಪಡುವಣ ನಾಡಿನ ಪ್ರೇಮವೀರ ಪಡುವಣ ನಾಡಿನ ಪ್ರೇಮವೀರಇಂಗ್ಲಿಷ್ ಮೂಲ : ಜೆ.ಎಂ. ಸಿಂಜ್ ಕನ್ನಡಕ್ಕೆ : ಡಾ.ಬಸವರಾಜ ನಾಯ್ಕರ್ಗೀತಾಂಜಲಿ ಪಬ್ಲಿಕೇಷನ್ಸ್ಪ್ರಕಟಣಾ ವರ್ಷ : ೨೦೦೮ಬೆಲೆ : ರೂ.೧೨೫ಪುಟಗಳು : ೨೪೦ ಐರ್‌ಲ್ಯಾಂಡಿನ ಪ್ರಸಿದ್ಧ ನಾಟಕಕಾರ ಜೆ.ಎಂ.ಸಿಂಜ್‌ನ ಐದು ನಾಟಕಗಳು ಇಲ್ಲಿವೆ. ಸುಸಂಸ್ಕೃತ ಮನೆತನದಲ್ಲಿ ಹುಟ್ಟಿ ಬೆಳೆದ ಸಿಂಜ್ ತನ್ನ ಬಾಲ್ಯವನ್ನು ದಕ್ಷಿಣ ಡಬ್ಲಿನ್‌ನ ಗುಡ್ಡಗಾಡು ಪ್ರದೇಶದಲ್ಲಿ ಕಳೆದಿದ್ದ. ಆದ್ದರಿಂದಲೇ ನಿಸರ್ಗ ಸೌಂದರ್ಯದ ಬಗ್ಗೆ ಅಪಾರ ಒಲವನ್ನು ಅವನು ಬೆಳೆಸಿಕೊಂಡ. ಅವನ ನಾಟಕಗಳಲ್ಲಿ ಹಳ್ಳಿಯ ಬದುಕಿನ ಸನ್ನಿವೇಶಗಳು ಮತ್ತು ವರ್ಣನೆಗಳು ಯಥೇಚ್ಛವಾಗಿ ಕಾಣ ಸಿಗುತ್ತವೆ.  ಸಿಂಜ್ ಬದುಕಿದ್ದು ಮೂವತ್ತೇಳು ವರ್ಷಗಳ ಕಾಲ ಮಾತ್ರ. ಅದರೊಳಗೆ ಒಟ್ಟು ಆರು ನಾಟಕಗಳನ್ನು ಅವನು ಬರೆದ. ಅವುಗಳಲ್ಲಿ ಐದು ನಾಟಕಗಳು ಐರಿಷ್ ನ್ಯಾಷನಲ್ ಥಿಯೇಟರಿನಲ್ಲಿ ಪ್ರದರ್ಶನಗೊಂಡವು. ಅವು ಶಾಡೋ ಆಫ್ ದ ಗ್ಲೆನ್ , ರೈಡರ‍್ಸ್ ಟು  ದ ಸೀ, ದಿ ವೆಲ್ ಆಫ್ ದಿ ಸೇಂಟ್ಸ್, ದ ಪ್ಲೇಬಾಯ್ ಆಫ್ ದಿ ವೆಸ್ಟೆರ್ನ್ ವರ್ಲ್ಡ್ ಮತ್ತು ದಿ ಡೀಡ್ ಆಫ್ ದಿ ಸಾರೋಜ್. ಈ ಐದೂ ನಾಟಕಗಳನ್ನು ಬಸವರಾಜ ನಾಯ್ಕರ್ ಅವರು ಕನ್ನಡದ ಜಾಯಮಾನಕ್ಕೆ ಹೊಂದಿಕೊಳ್ಳುವಂತೆ  ರೂಪಾಂತರಿಸಿದ್ದಾರೆ.  ದಿ ಶಾಡೋ ಆಫ್ ದಿ ಗ್ಲೆನ್( ಕೊಳ್ಳದ ನೆರಳು) ನಾಟಕವು ಒಂದು ಹಳ್ಳಿಯ ಒಂಟಿ ಮನೆಯಲ್ಲಿ ನಡೆಯುವ ಘಟನೆಯನ್ನು ಚಿತ್ರಿಸುತ್ತದೆ. ಈ ನಾಟಕವು ಸಿಂಜ್‌ನ ಆತ್ಮ ಚರಿತ್ರೆಯಂತಿದೆ. ಸಾವಿನ ಬಗೆಗಿನ ಆತನ ಭಯವನ್ನು ಇದು ಚಿತ್ರಿಸುತ್ತದೆ. ಹೊರನೋಟಕ್ಕೆ ಇದು ಹಾಸ್ಯನಾಟಕದಂತೆ ಕಂಡರೂ ಹೆಣ್ಣಿನ ಮನಸ್ಸನ್ನು ಕಾಡುವ ಅಭದ್ರತೆಯ ಭಾವನೆ ಮತ್ತು ಹೆಣ್ಣು ಸದಾ ಗಂಡಿನ ಮೇಲೆ ಅವಲಂಬಿಸುವ ಹಾಗೂ ಗಂಡು ಅವಳ ಬಗ್ಗೆ ತೋರಿಸುವ ತಾತ್ಸಾರದಿಂದಾಗಿ ಸಂಭವಿಸುವ ದುರಂತಗಳನ್ನು ಅದು  ಚಿತ್ರಿಸುತ್ತದೆ. ‘ರೈಡರ‍್ಸ್ ಟು ದ ಸೀ’( ಸಾವಿನೆಡೆಗೆ ಸವಾರಿ) ನಾಟಕವು ಸಿಂಜ್ ವಾಸಿಸಿದ್ದ ಆರನ್ ಎಂಬ ಹಳ್ಳಿಯ ಹಿನ್ನೆಲೆಯನ್ನು ಹೊಂದಿದೆ. ಅಲ್ಲಿನ ಒಂದು ಕುಟುಂಬದಲ್ಲಿ ಜನಿಸುವ ಎಲ್ಲ ಮಕ್ಕಳೂ ಸಮುದ್ರ ಪಾಲಾಗಿ, ತಾಯಿ ಅನುಭವಿಸುವ ಯಾತನೆಯನ್ನು ಚಿತ್ರಿಸುತ್ತದೆ. ಇಲ್ಲೂ ಸಿಂಜ್‌ನ ಸಾವಿನ ಭಯವೇ ಇದೆ.  ‘ದ ಥಿಂಕರ‍್ಸ್ ವೆಡ್ಡಿಂಗ್ ‘( ಕಲಾಯಿಗಾರನ ಮದುವೆ) ಎನ್ನುವುದು ಒಂದು ವೈನೋದಿಕ. ಇಲ್ಲಿನ ಮುಖ್ಯ ಪಾತ್ರಗಳು ಐರಿಷ್ ಕಲಾಯಿಗಾರರು. ‘ದ ಪ್ಲೇಬಾಯ್ ಆಫ್ ದ ವೆಸ್ಟೆರ್ನ್ ವರ್ಲ್ಡ್’ (ಪಡುವಣ ನಾಡಿನ ಪ್ರೇಮವೀರ) ಬಹಳ ಪ್ರಸಿದ್ಧ ನಾಟಕ.  ಇದು ವೈನೋದಿಕದಂತೆ ಕಂಡರೂ ಒಂದು ದುರಂತ ಕಥೆ. ಕ್ರಿಸ್ತಿ ಮ್ಯಾಹನ್ ಎಂಬ ಯುವಕ ಹೇಳುವ ಸುಳ್ಳುಗಳಿಂದ  ಅವನು ಹೋಗುವ ಸಾರಾಯಿ ಅಂಗಡಿಯ ಮಾಲೀಕ ಫ್ಲಾಹರ್ಟಿಯ ಮಗಳು ಪೆಗೀನ್ ಮೈಕಳನ್ನು ಮದುವೆಯಾಗುವ ಅವಕಾಶವನ್ನು ಅವನು ಕಳೆದುಕೊಳ್ಳುತ್ತಾನೆ. ಕಾನೂನಿನ ಭಯದಿಂದಾಗಿ ಅವನೂ ಊರು ಬಿಟ್ಟು ಹೋದ ನಂತರ ಅವನ ವ್ಯಕ್ತಿತ್ವದ ಪ್ರಭಾವದಿಂದ ಅವನಲ್ಲಿ ಮೋಹಿತಳಾದ ಪೆಗೀನ್ ದುಃಖಿಸುತ್ತಾಳೆ.  ಕೊನೆಯ ನಾಟಕ ‘ದ ವೆಲ್ ಆಫ್ ದ ಸೇಂಟ್ಸ್’ ( ಜೋಗೀಭಾವಿ) ಮೂರು ಅಂಕಗಳಿರುವ ಒಂದು ನಾಟಕ.  ಮಾರ್ಟಿನ್ ಮತ್ತು ಮೇರಿ ಡೌಲ್ ಎಂಬ ಕುರುಡ ದಂಪತಿಗಳು ಸಂತನೊಬ್ಬನ ಸಹಾಯದಿಂದ ದೃಷ್ಟಿ ಪಡೆದುಕೊಂಡರೂ ತಮ್ಮ  ಪ್ರಮಾ ದದಿಂದಾಗಿ ಬದುಕನ್ನು ಹಾಳು ಮಾಡಿಕೊಳ್ಳುವ ಕಥೆ ಇಲ್ಲಿದೆ. ನಾಟಕದ ವಸ್ತುವಿಗೆ ಐರ್‌ಲ್ಯಾಂಡಿನ ಹಿನ್ನೆಲೆಯಿದ್ದರೂ ಇದು ಸಾರ್ವತ್ರಿಕ ಮಹತ್ವ ಪಡೆದಂತಹ ಕತೆ. ಈ ಎಲ್ಲ ನಾಟಕಗಳು ಕಲಬುರ್ಗಿ ಮತ್ತು ಧಾರವಾಡಗಳಲ್ಲಿ ರಂಗದ ಮೇಲೆ ಬಂದಿವೆ ಮತ್ತು ಆಕಾಶವಾಣಿಯಲ್ಲೂ ಪ್ರಸಾರವಾಗಿವೆ. ಅನುಭವಿ ಅನುವಾದಕರು ಮಾತ್ರವಲ್ಲದೆ ಭಾಷಾ ವಿದ್ವಾಂಸರೂ ಆಗಿರುವ ನಾಯ್ಕರ್ ಅವರು ಮಾಡಿದ ರೂಪಾಂತರವು ನಾಟಕಗಳಿಗೆ ಕನ್ನಡದ್ದೇ ಮೆರುಗನ್ನು ನೀಡಿವೆ. ***************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ನರವಾನರ ನರವಾನರಮರಾಠಿ ಮೂಲ : ಶರಣಕುಮಾರ ಲಿಂಬಾಳೆಕನ್ನಡಕ್ಕೆ : ಪ್ರಮೀಳಾ ಮಾಧವಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ. ೧೬೫ಪುಟಗಳು : ೧೯೨ ಭಾರತದಾದ್ಯಂತ ಅಂಬೇಡ್ಕರ್ ದಲಿತರ ಪರವಾಗಿ ಮಾಡಿದ ಚಳುವಳಿಯ ಕುರಿತಾದ ಕಾದಂಬರಿ ಇದು. ಮನುಸ್ಮೃತಿಯಲ್ಲಿ ಶೂದ್ರರು ಮತ್ತು ದಲಿತರ ಕುರಿತಾಗಿರುವ ಉಲ್ಲೇಖಗಳಿಂದ ದಲಿತರ ಬದುಕು ನರಕವಾಗಿ ಬಿಟ್ಟು ಅವರಿಗಾದ ಅನ್ಯಾಯಗಳ ವಿರುದ್ಧ ಕೆರಳಿ ಕೆಂಡವಾದ ಅಂಬೇಡ್ಕರ್ ವರ್ಣವ್ಯವಸ್ಥೆಯಿಂದಾಗಿ ಹಿಂದೂ ಸಮಾಜದಲ್ಲಿ ಮೇಲು ಜಾತಿಯವರು ನಿಮ್ನ ಜಾತಿಯವರನ್ನು ಶೋಷಿಸಿದ್ದರ ವಿರುದ್ಧ ಸಮರ ಸಾರಿದರು. ಇಂಥ ಹಿಂದೂ ಸಮುದಾಯದಲ್ಲಿ ತಾನೆಂದೂ ಇರಲಾರೆ ಎಂದು ಬೌದ್ಧಧರ್ಮಕ್ಕೆ ಮತಾಂತರ ಹೊಂದಿ ಇತರರಿಗೂ ಕರೆಯಿತ್ತರು. ಆದರೆ ಆ ಮಹನೀಯರು ಮರಣ ಹೊಂದಿದ ನಂತರ ದಲಿತ ಚಳುವಳಿಯ ನೇತೃತ್ವ ವಹಿಸುವವರು ಯಾರೂ ಇಲ್ಲದೆ ದಲಿತರು ಅಸಹಾಯಕರಾದರು. ಆ ವಿಚಾರದಲ್ಲಿ ದೇಶದಾದ್ಯಂತ ಬಿಕ್ಕಟ್ಟುಗಳು ತಲೆದೊರಿದವು. ಜಗಳಗಳಾದವು. ಹಲವಾರು ಪಕ್ಷ- ಪಂಗಡಗಳು ಹುಟ್ಟಿಕೊಂಡವು. ಎಲ್ಲರೂ ‘ನಿಜವಾದ ಆಂದೋಲನ ನಮ್ಮದು’ಎಂದು ಕೂಗೆಬ್ಬಿಸ ತೊಡಗಿದವು. ಪ್ರಜಾಪ್ರಭುತ್ವದ ಹೆಸರಿನಲ್ಲಿ ದಲಿತ ಪ್ರತಿನಿಧಿಗಳನ್ನು ರಾಜಕೀಯ ಪಕ್ಷಗಳು ತಮ್ಮೆಡೆಗೆ ಸೆಳೆಯ ತೊಡಗಿದವು. ಈ ಕಾದಂಬರಿ ಇದೇ ವಿಷಯವನ್ನು ಕುರಿತು ಚರ್ಚಿಸುತ್ತದೆ. ಮೊದಲ ಅಧ್ಯಾಯದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಬಡ ಯುವಕ ಅನಿರುದ್ಧ ಕಾಲೇಜಿಗೆ ಸೇರಿದಾಗ ಅವನಿಗೆ ದಲಿತ ಯುವಕರಿದ್ದ ರೂಮಿನಲ್ಲಿ ಸೀಟು ಸಿಗುತ್ತದೆ. ಅವನು ದಲಿತ ಗೆಳೆಯರ ಸಂಕಷ್ಟಗಳನ್ನು ನೋಡಿ ಮರುಗುತ್ತ ಸಾವಿರಾರು ವರ್ಷಗಳಿಂದ ಅವರನ್ನು ಶೋಷಿಸುತ್ತ ಬಂದ ತನ್ನ ಬ್ರಾಹ್ಮಣ ಸಮುದಾಯವನ್ನು ಬಿಟ್ಟು ದಲಿತನಾಗುತ್ತಾನೆ. ಇನ್ನೊಂದು ಅಧ್ಯಾಯದಲ್ಲಿ ಬ್ರಾಹ್ಮಣ ಸಮುದಾಯದ ಹುಡುಗಿ ದಲಿತನನ್ನು ಮದುವೆಯಾಗುತ್ತಾಳೆ. ದಲಿತ ಚಳುವಳಿ ಪ್ರಬಲವಾಗುತ್ತ ಹೊಗುತ್ತದೆ. ದಲಿತ ಪ್ಯಾಂಥರ್ ಮತ್ತು ರಿಪಬ್ಲಿಕನ್ ಪಾರ್ಟಿ ಎಂಬ ಸಂಘಟನೆಗಳು ಹುಟ್ಟಿಕೊಳ್ಳುತ್ತವೆ. ಆದರೆ ಸಂಘರ್ಷಗಳ ಮೂಲಕ ದಲಿತ ಚಳುವಳಿ ವ್ಯವಸ್ಥೆಯ ಒಂದು ಭಾಗವಾಗಿ ಹೋಗುತ್ತದೆ. ದಲಿತ ಸಾಹಿತ್ಯ ಮತ್ತು ದಲಿತ ರಾಜಕೀಯಗಳು ಈ ಚಳುವಳಿಯ ಉತ್ಪನ್ನಗಳಾಗುತ್ತವೆ. ಹೀಗೆ ಕಾದಂಬರಿಯ ವಸ್ತು ಇಂದಿನ ವ್ಯವಸ್ಥೆಯ ಜ್ವಲಂತ ಚಿತ್ರಣವಾಗಿದ್ದು ಅತ್ಯಂತ ಪ್ರಸ್ತುತವಾಗಿದೆ. ಪ್ರಮೀಳಾ ಅವರ ಅನುವಾದದ ಶೈಲಿ ಸುಂದರವಾಗಿದೆ ಮತ್ತು ಸುಲಲಿತವಾಗಿದೆ. *************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಮಾನವ ಜೀವನ : ಒಂದು ವಿಲಕ್ಷಣ ಪ್ರಹಸನ ಮಾನವ ಜೀವನ : ಒಂದು ವಿಲಕ್ಷಣ ಪ್ರಹಸನಮೂಲ ಗುಜರಾತಿ: ಪನ್ನಾಲಾಲ್ ಪಟೇಲ್ ಕನ್ನಡಕ್ಕೆ : ಎಲ್.ವಿ.ಶಾಂತಕುಮಾರಿಪ್ರ : ಸಾಹಿತ್ಯ ಅಕಾಡೆಮಿಪ್ರ.ವರ್ಷ :೨೦೧೫ಬೆಲೆ : ರೂ.೧೯೦ಪುಟಗಳು : ೪೨೪   ಎಲ್.ವಿ.ಶಾಂತಕುಮಾರಿ ನಮ್ಮ ನಡುವಿನ ಬಹಳ ದೊಡ್ಡ ವಿದ್ವಾಂಸರು ಮತ್ತು ಅನುವಾದಕರು. ಅನೇಕ ಕ್ಲಾಸಿಕ್ ಗಳನ್ನು ಅವರು ಕನ್ನಡಕ್ಕೆ ಮತ್ತು ಕನ್ನಡದಿಂದ ಇಂಗ್ಲಿಷಿಗೆ ಅನುವಾದಿಸಿದ್ದಾರೆ. ಮಾನವ ಜೀವನ : ಒಂದು ವಿಲಕ್ಷಣ ಪ್ರಹಸನ’ ಕಾದಂಬರಿಯು ಜ್ಞಾನಪೀಠ ಪ್ರಶಸ್ತಿ ವಿಜೇತ ಗುಜರಾತಿ ಲೇಖಕ ಪನ್ನಾಲಾಲ್ ಪಟೇಲ್ ಅವರ ‘ಮಾನವೀನಿ ಭಾವೈ’ಎಂಬ ಮೂರು ಭಾಗಗಳಲ್ಲಿರುವ ಕೃತಿಯ ಮೊದಲ ಭಾಗ ‘ಮಾಲೇಲ್ ಜೀವ್’ ಇದರ ಭಾಷಾಂತರ. ಕೇಂದ್ರ ಸಾಹಿತ್ಯ ಅಕಾಡೆಮಿಯು ಈ ಅನುವಾದವನ್ನು ಶಾಂತಕುಮಾರಿಯವರಿಂದ ಮಾಡಿಸಿದೆ. ನಲವತ್ತರ ದಶಕದಲ್ಲಿ ಪನ್ನಾಲಾಲ್ ಅವರು ಬರೆದ ಈ ಕಾದಂಬರಿ ಕಾಲ್ಪನಿಕ ಕಥನ ಶೈಲಿಯಲ್ಲಿದೆ.  ಅದುವರೆಗೆ ಗುಜರಾತಿ ಸಾಹಿತ್ಯದಲ್ಲಿ ಬಳಕೆಯಲ್ಲಿದ್ದ ಸಂಸ್ಕೃತ ಭೂಯಿಷ್ಠವಾದ ಶಿಷ್ಟ ಕಥಾಸಾಹಿತ್ಯಕ್ಕೊಂದು ತಿರುವು ಕೊಟ್ಟ ಕೃತಿಯಿದು. ತತ್ವ ಚಿಂತನೆಯ ಅತಿಭಾವುಕತೆ, ಆದರ್ಶಗಳ ಬೋಧನೆ ಮತ್ತು ತದ್ರೂಪಿ ಪಾತ್ರ ಚಿತ್ರಣಗಳನ್ನು ನಾವಿಲ್ಲಿ ನೋಡಬಹುದು. ಸಾಂಪ್ರದಾಯಿಕ ಶೈಲಿಯ ಕೃತಕತೆ ಹಾಗೂ ಸಂಕೀರ್ಣತೆಯಿಂದ ಮುಕ್ತವಾದ ಸರಳವೂ ನೇರವೂ ಆದ ನಿರೂಪಣೆ ಇಲ್ಲಿದೆ.      ಈ ಕಾದಂಬರಿಯಲ್ಲಿ ಮುಖ್ಯವಾಗಿ ಗ್ರಾಮೀಣ ಪ್ರದೇಶದ ರೈತಾಪಿ ಜನರ ಬದುಕು, ಅವರು ಅನುಭವಿಸುವ ಕಷ್ಟ ಕೋಟಲೆಗಳು, ಅವರ ಪದ್ಧತಿ-ಸಂಪ್ರದಾಯಗಳು, ಜೀವನ ಕ್ರಮ, ಅವರ ನಡುವಣ ಪ್ರೀತಿಯ ಸಂಬಂಧಗಳು ಮತ್ತು ಅಂಧ ವಿಶ್ವಾಸಗಳ ಚಿತ್ರಣಗಳಿವೆ. ಜತೆಗೆ ನಿಸರ್ಗದ ರಮ್ಯ ಮನೋಹರ ಹಿನ್ನೆಲೆಯೂ ಇದೆ. ಆದರೆ ಕಾದಂಬರಿಯುದ್ದಕ್ಕೂ ಕಾಣುವ ಬರಗಾಲದ ಚಿತ್ರಣವು ಭಯಾನಕವಾಗಿದೆ. ಹಳ್ಳಿಗಳನ್ನೂ ಬೆಟ್ಟ ಗುಡ್ಡಗಳನ್ನೂ ಕೊಚ್ಚಿಕೊಂಡು ಹೋಗಿ ಜನರ ಬದುಕನ್ನು ಛಿದ್ರಗೊಳಿಸುವ ಚಿತ್ರಗಳು, ಗುಡ್ಡಗಾಡಿನ ಮಂದಿ ಗ್ರಾಮೀಣರ ಮೇಲೆ ನಡೆಸುವ ಲೂಟಿ-ಆಕ್ರಮಣಗಳು, ಕ್ಷಾಮದ ಅಸಹಾಯಕ ಸ್ಥಿತಿಯಲ್ಲಿ ದನಗಳನ್ನು ಹಸಿಹಸಿಯಾಗಿಯೇ ತಿನ್ನುವ ಮತ್ತು  ತಾಯಿಯೇ ತನ್ನ ಮಗುವನ್ನು ತಿನ್ನುವ ದೃಶ್ಯಗಳು ಭೀಭತ್ಸವಾಗಿವೆ.      ಕಾಳು ಮತ್ತು ರಾಜೂ ಇಲ್ಲಿನ ಮುಖ್ಯ ಪಾತ್ರಗಳು. ಬಹಳ ಚಿಕ್ಕವರಿದ್ದಾಗಲೇ ಅವರಲ್ಲಿ ಅಂಕುರಿಸಿದ್ದ ಪ್ರೇಮವು ಸಾಮಾಜಿಕ ಕಟ್ಟುಪಾಡುಗಳ ನಡುವೆ ಸಿಲುಕಿ ನಲುಗಿದರೂ ಕಾದಂಬರಿ ಕೊನೆ ಮುಟ್ಟುತ್ತಿದ್ದಂತೆ ಶುದ್ಧ ಸಲಿಲದ ಕಾರಂಜಿಯಾಗಿ ಚಿಮ್ಮಿ ಹರಿಯುವ ಹೃದಯಂಗಮ ಚಿತ್ರಣವು ಓದುವವರ ಮನಸ್ಸಿಗೆ ಕಚಗುಳಿಯಿಡುತ್ತದೆ.    ಕಾಳು-ರಾಜೂರ ನಡುವಣ ಉದಾತ್ತ ಪ್ರೇಮವು ಕಾದಂಬರಿಯ ಕೊನೆಯಲ್ಲಿ ಮನಸೂರೆಗೊಳ್ಳುತ್ತದೆ. ಬರದ ಬೇಗೆಯನ್ನು ತಾಳಲಾರದೆ ಅವರಿಬ್ಬರೂ ಊರು ಬಿಟ್ಟು ಹೋಗುತ್ತಾರೆ. ತಡೆಯಲಾರದ ಹಸಿವಿನಿಂದ ಬಳಲುವ ಕಾಳು ‘ನೀರು ಬೇಕು’ ಅನ್ನುತ್ತ ಕುಸಿದು ಬೀಳುತ್ತಾನೆ.  ಬರದ ಬೆಂಗಾಡಿನಲ್ಲಿ ರಾಜು ಎಲ್ಲಿಂದ ತರಬೇಕು ನೀರು? ಅವಳ ಮಾತೃಹೃದಯ ವಿಲವಿಲ ಒದ್ದಾಡುತ್ತದೆ. ಕಾಳೂನ ಎದೆಯ ಮೇಲೆ ಮಲಗಿ ಅವಳು ಅಳುತ್ತಾಳೆ. ತನ್ನ ಎದೆಯನ್ನು ತೋರಿಸಿ ‘ ಇಲ್ಲೂ ಏನೂ ಇಲ್ಲ. ಎಲ್ಲ ಒಣಗಿ ಹೋಗಿದೆ’ಅನ್ನುತ್ತಾಳೆ. ಅವಳ ಮೊಲೆಗಳಿಂದ ದ್ರವ ಜಿನುಗಿತೋ ಅಥವಾ ಅವಳ ಬಾಯಿಯಿಂದ ರಸದ ಸ್ಪರ್ಶವಾಯಿತೋ ದೇವರೇ ಬಲ್ಲ. ಪವಾಡದಂತೆ ಕಾಳು ಎದ್ದು ನಿಲ್ಲುತ್ತಾನೆ.  ಪ್ರಕೃತಿಯನ್ನು ಪ್ರತಿನಿಧಿಸುವ ಹೆಣ್ಣು ತಾನು ಪ್ರೀತಿಸುವ ಪುರುಷನ ಪಾಲಿಗೆ ಚೈತನ್ಯದಾಯಿನಿಯಾಗುತ್ತಾಳೆ ಎಂಬ ಅರ್ಥದಲ್ಲಿ ಈ ದೃಶ್ಯವು ಚಿತ್ರಿಸಲ್ಪಟ್ಟಿದೆ ( ಪು.೪೨೨). ಶಾಂತಕುಮಾರಿಯವರ ಸುಂದರ ಅನುವಾದವು ಕೃತಿಯನ್ನು ಖುಷಿಯಿಂದ ಓದಿಸಿಕೊಂಡು ಹೋಗುತ್ತದೆ. ************************ ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಲೇರಿಯೊಂಕ ಲೇರಿಯೊಂಕ ( ಕಾದಂಬರಿ)ಮೂಲ : ಹೆನ್ರಿ ಆರ್. ಓಲೆ ಕುಲೆಟ್ ಕನ್ನಡಕ್ಕೆ : ಪ್ರಶಾಂತ ಬೀಚಿಪ್ರ : ಛಂದ ಪುಸ್ತಕಪ್ರಕಟಣೆಯ.ವರ್ಷ : ೨೦೦೮ಬೆಲೆ : ರೂ.೧೦೦ಪುಟಗಳು : ೨೫೦  ಕೀನ್ಯಾದ ಹೆಸರಾಂತ ಕಾದಂಬರಿಕಾರ ಹೆನ್ರಿ ಆರ್.ಓಲೆ ಕುಲೆಟ್ ಅವರ ಈ ಕಾದಂಬರಿಯು ಲೇರಿಯೊಂಕ ಎಂಬ ಒಬ್ಬ ದನಗಾಹಿ ಹುಡುಗ ಶಾಲೆಗೆ ಹೋಗಲು ಪಡಬಾರದ ಪಾಡು ಪಟ್ಟು ಕೊನೆಗೆ ಸ್ವಂತ ಪರಿಶ್ರಮದಿಂದ ವಿದ್ಯಾವಂತನಾಗಿ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವುದರ ಕುರಿತಾದ ಕಥೆಯನ್ನು ಹೇಳುತ್ತದೆ.  ಮಾಸಯಿ ಜನಾಂಗಕ್ಕೆ ಸೇರಿದ ಲೇರಿಯೊಂಕ ಸರಕಾರದ ಒತ್ತಾಯಕ್ಕೊಳಗಾಗಿ ಶಾಲೆಗೆ ಸೇರುತ್ತಾನಾದರೂ ಕಾಲಕ್ರಮೇಣ ಶಾಲೆಯ ಬದುಕನ್ನು ಬಹಳವಾಗಿ ಇಷ್ಟ ಪಡುತ್ತಾನೆ. ವಾಸ್ತವದಲ್ಲಿ ಮಾಸಯಿಗಳು ಯಾರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪುವುದಿಲ್ಲ. ಲೇರಿಯೊಂಕ ಏನೇನೋ ಸಬೂಬು ಹೇಳಿ ಮನೆ ಬಿಟ್ಟು ಕಾಲ್ನಡಿಗೆಯಲ್ಲಿ ಬಹು ದೂರ ಸಾಗಿ , ಹಳ್ಳ-ತೊರೆ-ಗುಡ್ಡ-ಕಾಡುಗಳನ್ನು ದಾಟಿ, ಅನೇಕ ಅಪಾಯ-ತೊಂದರೆಗಳನ್ನು ಎದುರಿಸಿ ದೂರದ ನಗರ ಸೇರಿ ಅಲ್ಲಿ ಎಂಟು ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡುತ್ತಾನೆ. ಆಗ ಅವನಿಗೆ ವಿದ್ಯಾವಂತರೆಲ್ಲ ಬಿಳಿಯರ ವಿರುದ್ಧ ನಿಂತು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿರುವುದು ಕಾಣುತ್ತದೆ.   ಕೆನ್ಯಾದವರಿಗೆ ತಮ್ಮನ್ನು ಆಳಿಕೊಳ್ಳುವ ಶಕ್ತಿಯಿದೆ, ಆದ್ದರಿಂದ ಬಿಳಿಯರು ತಮ್ಮ ಮೇಲೆ ಅಧಿಕಾರ ಚಲಾಯಿಸುವ ಅಗತ್ಯವಿಲ್ಲವೆನ್ನುವ ಭಾವನೆ ಲೇರಿಯೊಂಕನಿಗೂ ಬರುತ್ತದೆ.  ಎಲ್ಲ ವಿದ್ಯಾವಂತರಂತೆ ಕೆನ್ಯಾ ಸ್ವತಂತ್ರವಾಗಬೇಕು, ಮತ್ತು ತನ್ನ ಸಂಸ್ಕೃತಿಯ ಎಲ್ಲ ಅಂಶಗಳನ್ನು ಉಳಿಸಿಕೊಂಡು ಆ ಬಗ್ಗೆ ಅಭಿಮಾನ ಪಡಬೇಕು ಎಂಬ ಆಶಯವನ್ನು ಲೇರಿಯೊಂಕನೂ ಇಟ್ಟುಕೊಳ್ಳುತ್ತಾನೆ.  ವಿದ್ಯೆ ಪಡೆದರೆ ಕಪ್ಪು ಜನರೂ ಬಿಳಿಯರ ಸಮಾನರಾಗಬಲ್ಲರು ಎಂಬ ನಂಬಿಕೆಯನ್ನು ಹಿರಿಯ ತಲೆಮಾರಿನವರಲ್ಲೂ ಹುಟ್ಟಿಸಿ ಕಾದಂಬರಿ ಕೊನೆಗೊಳ್ಳುತ್ತದೆ. ಕಾದಂಬರಿಯುದ್ದಕ್ಕೂ ಮಾಸಯಿ ಜನಾಂಗದ ಜೀವನ ಪದ್ಧತಿ, ನಂಬಿಕೆ-ಆಚರಣೆಗಳು, ನಡೆ-ನುಡಿ-ವರ್ತನೆ, ಅವರು ಸಂಬಂಧಗಳನ್ನಿಟ್ಟುಕೊಳ್ಳುವ ಪರಿ ಮತ್ತು ಅವರ ನಾಣ್ಣುಡಿ-ಗಾದೆ ಮಾತುಗಳು ತುಂಬಿಕೊಂಡಿವೆ.  ವಸ್ತು-ವಿನ್ಯಾಸ-ರಚನೆ, ನಿರೂಪಣೆ-ಪಾತ್ರ ಚಿತ್ರಣಗಳ ದೃಷ್ಟಿಯಿಂದ  ಇದು ಅತ್ಯುತ್ತಮವಾದ ಒಂದು ಕೃತಿ. ಆಧುನಿಕೋತ್ತರ ಸಾಹಿತ್ಯದ ಒಂದು ಪ್ರಮುಖ ಲಕ್ಷಣವಾಗಿರುವ ಬದಿಗೆ ತಳ್ಳಲ್ಪಟ್ಟ ಜನಾಂಗದ ಬದುಕಿನ ಚಿತ್ರಣ ಇಲ್ಲಿರುವುದರಿಂದ ಇದರ ಅನುವಾದ ಅತ್ಯಂತ ಪ್ರಸ್ತುತ.  ಅನುವಾದಕರ ಪ್ರಯತ್ನ ಶ್ಲಾಘನೀಯ. ಆದರೆ ವಾಕ್ಯ ರಚನೆ ಮತ್ತು ಪದಪ್ರಯೋಗಗಳನ್ನು ಸಮರ್ಪಕವಾಗಿ ಮಾಡುವಲ್ಲಿ ಇನ್ನಷ್ಟು ಪರಿಶ್ರಮವಿದ್ದರೆ ಒಳ್ಳೆಯದು. ******************************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಸೀಗಲ್ ಸೀಗಲ್ಮೂಲ : ಆಂಟನ್ ಚೆಕಾಫ್ ಕನ್ನಡಕ್ಕೆ : ಹೇಮಾ ಪಟ್ಟಣಶೆಟ್ಟಿಪ್ರ : ಅನನ್ಯ ಪ್ರಕಾಶನಪ್ರ.ವರ್ಷ :೨೦೦೭ಬೆಲೆ :ರೂ.೭೦ಪುಟಗಳು : ೧೦೮ ಎರಡು ತಲೆಮಾರುಗಳ ನಡುವಣ ಸಂಘರ್ಷವೇ ಈ ನಾಟಕದ ಮುಖ್ಯ ಕಥಾ ವಸ್ತು. ಇಬ್ಬರು ನಟಿಯರು ಮತ್ತು ಇಬ್ಬರು ಲೇಖಕರುಗಳ ನಡುವಣ ಸಂಬಂಧದ ಸ್ವರೂಪದ ಶೋಧನೆಯೇ ಇಲ್ಲಿನ ಮುಖ್ಯ ಕಾಳಜಿಯಾಗಿದೆ. ಹಿರಿಯ ನಟಿ ಅರ್ಕಾದಿನಾ ಮತ್ತು ಹಿರಿಯ ಲೇಖಕ ತ್ರಿಗೊರಿನ್ ಆಗಲೇ ಸಮಾಜದಲ್ಲಿ ತಮ್ಮ ನೆಲೆಯನ್ನು ರೂಪಿಸಿಕೊಂಡವರು. ಯುವಕ ತ್ರೆಪ್ಲೆಫ್ ಮತ್ತು ಎಳೆಯ ಯುವತಿ ನೀನಾ ಇನ್ನೂ ಅನನುಭವಿಗಳು. ಹಿರಿಯ ಜೋಡಿಗೆ ನಗರದ ಹಿನ್ನೆಲೆಯಿದ್ದರೆ ಕಿರಿಯ ಜೋಡಿಯ ಸ್ವಭಾವದಲ್ಲಿ ಗ್ರಾಮೀಣ ಸೊಗಡಿದೆ. ತ್ರೆಪ್ಲೆಫ್ ಪ್ರಸಿದ್ಧ ಲೇಖಕನಾಗಲು ಮತ್ತು ನೀನಾ ಪ್ರಸಿದ್ಧ ನಟಿಯಾಗಲು ಬಯಸುತ್ತಾರೆ. ಆದರೆ ತ್ರೆಫ್ಲೆಫ್ ನೀನಾಳನ್ನು ಪ್ರೀತಿಸಿದರೆ ನೀನಾ ತ್ರಿಗೊರಿನ್ ಬಗ್ಗೆ ಮೆಚ್ಚುಗೆಯಿಟ್ಟುಕೊಂಡಿದ್ದಾಳೆ. ತ್ರಿಗೊರಿನ್‌ಗೆ ನೀನಾ ಬೇಕು. ಆದರೆ ಅರ್ಕಾದಿನಾಗೆ ತ್ರಿಗೊರಿನ್ ಬೇಕು. ಹಾಗೆಂದು ಇದು ಸಾಮಾನ್ಯ ತ್ರಿಕೋನ ಪ್ರೇಮದ ಕಥೆಯಲ್ಲ. ಇದರ ಜತೆಗೆ ಮಾಶಾ ಮತ್ತು ಮೆದ್ವೆದೆಂಕೋ ಎಂಬ ಇನ್ನೊಂದು ಜೋಡಿಯ ಕಥೆಯೂ ಇಲ್ಲಿ ಹೆಣೆದುಕೊಳ್ಳುತ್ತದೆ. ಇಡೀ ನಾಟಕದಲ್ಲಿ ಪ್ರತಿಯೊಬ್ಬರೂ ಪ್ರೀತಿಯೆಂಬ ಮಧುರ ಸಂಬಂಧದ ಬೆನ್ನು ಹತ್ತಿದರೂ ವಾಸ್ತವದ ಬದುಕಿನಲ್ಲಿ ತಮ್ಮ ಆಸೆಗಳ ವೈಫಲ್ಯದಿಂದಾಗಿ ಹತಾಶರಾಗುತ್ತಾರೆ. ಮಾಶಾ ಮಾತ್ರ ವಾಸ್ತವವನ್ನು ಅರ್ಥ ಮಾಡಿಕೊಂಡು ಮೆದ್ವೆದೆಂಕೋನನ್ನು, ತಾನು ಆತನನ್ನು ಪ್ರೀತಿಸದೇ ಇದ್ದರೂ ಮದುವೆಯಾಗುತ್ತಾಳೆ. ಮನುಷ್ಯ ಸ್ವಭಾವ ಮತ್ತು ಮನುಷ್ಯ ಸಂಬಂಧಗಳ ವಿವಿಧ ವಾಸ್ತವಿಕ ಮುಖಗಳನ್ನು ನೈಜವಾಗಿ ಕಟ್ಟಿಕೊಡುವ ‘ಸೀಗಲ್ ‘ ನಲ್ಲಿ ಎಲ್ಲರೂ ಆ ಹಕ್ಕಿಯಂತೆ ಸ್ವಚ್ಛಂದವಾಗಿ ಹಾರಬಯಸುತ್ತಾರೆ. ಆದರೆ ಒಂದಿಲ್ಲೊಂದು ರೀತಿಯಲ್ಲಿ ಎಲ್ಲರೂ ಸೀಗಲ್ ನಂತೆ ಬೇಟೆಯಾಡಲ್ಪಡುತ್ತಾರೆ. ಹೀಗೆ ಶೀರ್ಷಿಕೆಯೇ ರೂಪಕವಾಗುವ ವಿಶಿಷ್ಟ ನಾಟಕ ‘ಸೀಗಲ್’ ಹಾಗೆಂದು ಸೀಗಲ್ ಕೇವಲ ಪ್ರೀತಿಯ ಕುರಿತಾದ ನಾಟಕವಲ್ಲ. ನಾಟಕಕ್ಕೆ ಇನ್ನೊಂದು ಆಯಾಮವಿದೆ. ಅದು ಸೃಜನಶೀಲತೆಯ ಕುರಿತಾದದ್ದು. ನಾಟಕದ ಆರಂಭದಲ್ಲಿ ಕಾಣುವ ತ್ರೆಪ್ಲೆಫ್ ರಚಿಸಿದ ನಾಟಕದ ಮೂಲಕ ಇದು ಕಾಣಿಸಿಕೊಳ್ಳುತ್ತದೆ. ಅವನು ಮಹತ್ವಾಕಾಂಕ್ಷಿ. ತನ್ನ ನಾಟಕ ಎಲ್ಲರಿಂದಲೂ ಪ್ರಶಂಸೆಗೊಳಗಾಗುತ್ತದೆ ಎಂಬ ಕನಸನ್ನು ಕಟ್ಟಿಕೊಂಡವನು. ಆದರೆ ಅವನು ಲೇವಡಿಗೊಳಗಾಗುತ್ತಾನೆ ಮತ್ತು ಹತಾಶನಾಗುತ್ತಾನೆ. ತ್ರಿಗೊರಿನ್ ಈ ಎಲ್ಲ ಹಂತಗಳನ್ನು ದಾಟಿದವನಾಗಿದ್ದಾನೆ. ಒಟ್ಟಿನಲ್ಲಿ ಸೃಷ್ಟಿಕ್ರಿಯೆಯಲ್ಲಿ ಉಂಟಾಗುವ ನೋವು, ಯಾತನೆಗಳಿಗೆ ನಾಟಕ ಸಾಕ್ಷಿಯಾಗುತ್ತದೆ. ಚೆಕಾಫ್‌ನ ಮೂಲಕೃತಿಯ ಸಾರ್ವಕಾಲಿಕ ಪ್ರಸ್ತುತತೆ ಈ ಅನುವಾದವನ್ನು ಸಾರ್ಥಕವಾಗಿಸಿದೆ. ನಾಟಕವನ್ನು ವೇದಿಕೆಯ ಮೇಲೆ ನೋಡಿ ಆನಂದಿಸುವಷ್ಟೇ ಸರಾಗವಾಗಿ ಹೇಮಾ ಪಟ್ಟಣಶೆಟ್ಟಿಯವರ ಅನುವಾದವೂ ಖುಷಿಯಿಂದ ಓದಿಸಿಕೊಂಡು ಹೋಗುವ ಸುಂದರ ಶೈಲಿಯಲ್ಲಿದೆ. ಹೆಚ್.ಎಸ್. ಉಮೇಶ್ ಅವರ ವಿದ್ವತ್ಪೂರ್ಣ ಮುನ್ನುಡಿಯಲ್ಲಿ ನಾಟಕದ ಅನುವಾದ ಹೇಗಿರಬೇಕೆಂಬುದರ ಬಗ್ಗೆ ಅನೇಕ ವಿಚಾರಗಳ ಚರ್ಚೆಯಿದೆ. ************************************************************ ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

You cannot copy content of this page

Scroll to Top