ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ ಕಂತು-ಆರು ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಸವಿತಾ ದೇಶಮುಖ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ “ಮಾತಾಡೋ ಮಾತಾಡೋ ಆತುಮದ ಲಿಂಗವೇ!! ಮುನಿಸುವುದೇತಕ್ಕೆ ಅನಿಮಿತ್ಯವಾಗಿ ನೀಎನ್ನಯ್ಯ ಮಾತಾಡು, ಚನ್ನೀಗ ಚರಲಿಂಗವೆ!! ನಂಬಿದೆ ನಂಬಿರುವೆ ಸಾಂಬ ನಿನ್ನಯ ಪಾದಕಂಬನಿ ಸುರಿಯುವವೊ ಶಂಭೋ ನೀ ಮಾತನಾಡೊ ಅಂಗೈಯದೊಳು ಬಂದು ಲಿಂಗರೂಪವ ತಾಳಿ  ಕಂಗೊಳಿಸುವ ಶಿವನೆ ಮಂಗಳಮಯ ಲಿಂಗವೇ!! (“ತಾರಕ ತಂಬೂರಿ” ಕವನ ಸಂಕಲನ) ನಂಬಿರುವೆ ನಿನ್ನನ್ನೇ ಅಂತ ಅಂಗೈಯಲ್ಲಿ ಲಿಂಗವನ್ನು ಹಿಡಿದ……  ಎಳೆ ವಯಸ್ಸಿನ ಜಯದೇವಿ ತಾಯಿಯವರು ಸಂಸಾರದ ಕಷ್ಟಗಳ ಹೊರೆಹೊರಲಾಗದೆ  ನೊಂದು ಆ ಲಿಂಗನನ್ನೆ ಬೇಡಿಕೊಳ್ಳುತ್ತಿದ್ದರು……. ನೋವಿನ ನೆರಳಲ್ಲಿ ದಿನಗಳನ್ನು ಎಣಿಸುತ್ತಿದ್ದ ಸೊಸೆಗೆ, ಅತ್ತೆಯ ಕಠೋರ ಮಾತುಗಳು ಮತ್ತು ದೌರ್ಜನ್ಯದ ನಡೆ ಬಲು ಹಿಂಸಿಸುತಿತ್ತು. ಪ್ರತಿದಿನವೂ ಅವರ ಮನಸ್ಸಿನಲ್ಲಿ ಬದುಕಿನ ಹೋರಾಟ—ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಯತ್ನ.ಕಣ್ಣೀರನ್ನು ಒಳಗೇ ಹತ್ತಿಕ್ಕಿ, ಮನೆಯ ಗೋಡೆಗಳ ನಡುವೆ ತನ್ನ ನೋವನ್ನು ಹೂತು ಬದುಕುತ್ತಿದ್ದ ಜಯದೇವಿ ತಾಯಿಯವರು ಬಸವಣ್ಣನ ವಚನವನ್ನು ಯಾವಾಗಲೂ ಹೇಳುತ್ತಿದ್ದರಂತೆ, ತಂದೆ ನೀನು ತಾಯಿ ನೀನು ಬಂದು ನೀನು ಬಳಗ ನೀನು”, …….. ನನ್ನ ಸುಖ ದುಃಖವು ನಿನ್ನದೇ…. ಅನ್ನುವ ಅರ್ಪಣೆಯ ಭಾವ ಬೆರುರಲಾರಂಭಿಸಿತ್ತು. ಲಿಗಾಡೆಯವರ ಮನೆ ಜಯನಿಕೀತನ ತಾಯಿ ಸಂಗಪ್ಪನವರು ಹೇಳುವಂತೆ “ಸಹನೆಯಿಂದ ಇರು ಸಿದ್ದರಾಮ ಕಾಯುತ್ತಾನೆ ಅಂತ ಹೇಳುವ ಮಾತು ನೆನಪಿಟ್ಟುಕೊಂಡು ಜೀವನದ ದೋಣಿ ಸಾಗಿಸುತಿದಂತೆ…..sss  ಜೀವನದಲ್ಲಿ ಸಂತಸದ ಅಲೆಗಳು ಅಪ್ಪಳಿಸಿದವು….ನೋವಿನ ಮೌನದ ಮಧ್ಯೆ ಒಂದು ದಿನ, ಅವರೊಳಗೆ ನಿಶ್ಶಬ್ದವಾಗಿ ಹೊಳೆಯುವ ಬೆಳಕು ಹುಟ್ಟಿತು…ತಾನು ಬಸೂರಿಯಾದ ಸುದ್ದಿ  ಹೃದಯಕ್ಕೆ ತಂಪು‌ ನೀಡಿತು…..!!!! ನೋವಿನ ಭಾರ ಕ್ಷಣ ಕಾಲದಲ್ಲಿ ಮಾಯವಾಗಿ ಹೋಯಿತೆನೊ ಅನ್ನಿಸಿತ್ತು.ಅವರಿಗೆ ಮೊದಲ ಬಾರಿಗೆ ತನ್ನದೇ ಆದ ಒಂದು ಆಂಶವು ಲೋಕಕ್ಕೆ ಬರುವದು… ತನಗಾಗಿಇನ್ನೊಂದು ಲೋಕವಿದೆ ಎನ್ನುವ ಭರವಸೆ ನೀಡತು, ಅವರು ಹೊಟ್ಟೆಗೆ ಕೈಯಿಟ್ಟು ಮೃದುವಾಗಿ ನಗುತ್ತಿದ್ದರು. ಆ ನಗು ಯಾರಿಗೂ ಕಾಣದಿದ್ದರೂ,  ಅದು ಉತ್ಸವದ ಕ್ಷಣಗಳಾಗಿದ್ದವು.ಮಗುವಿನ ಸಣ್ಣ ಚಲನೆ-ಒಲನೆಯು….., ಅವರಿಗೆ ಮಾತಾಡುವ ಧೈರ್ಯ ಕಲಿಸಿತು— ಪ್ರತಿಯೊಂದು ಉಸಿರಾಟವೂ ಹೊಸ ಅರ್ಥ ಪಡೆದಿತು; ಪ್ರತಿಯೊಂದು ಕ್ಷಣವು ನಿರೀಕ್ಷೆಯ ಬೆಳಕಾಗಿ ಮೂಡಿತು.ನೋವಿನ ನಡುವೆ ಹುಟ್ಟಿದ ಆ ಆನಂದ ಕ್ಷಣಗಳು, ಅವರ ಬದುಕಿಗೆ ಅರ್ಥ ನೀಡಿದವು.ದೌರ್ಜನ್ಯದಿಂದ ಕಲುಷಿತವಾದ ಮನಸ್ಸಿನಲ್ಲಿ, ತಾಯ್ತನದ ಸ್ಪರ್ಶವು  ಔಷಧಿಯಂತೆ ಕೆಲಸಮಾಡಿತು. ಆ ಮಗು ಅವರಿಗೆ ಶಕ್ತಿಯಾಯಿತು, ಭರವಸೆಯಾಯಿತು…!!! ಇನ್ನೇನು…. ನಿನ್ನೆವರೆಗೆ ಕಣ್ಣಲ್ಲಿ ಕಿಡಿ ತುಂಬಿಕೊಂಡು ಮಾತಾಡುತ್ತಿದ್ದ… .. “ನಿನಗೆ ಮಕ್ಕಳಾಗ ಯಾವ ಲಕ್ಷಣಗಳು ಕಾಣುವುದಿಲ್ಲ ನಾನು ಬೇರೆ ಮದುವೆ ಮಾಡ್ತೀನಿ ನನ್ನ ಮಗನಿಗೆ” ಅಂತ ಹೆದರಿಸುತ್ತಿದ್ದ …ಅತ್ತೆಯ ಹೃದಯದಲ್ಲಿ, ಒಮ್ಮಿಂದೊಮ್ಮೆಲೆ ಅನಿರೀಕ್ಷಿತವಾಗಿ ಸೊಸೆಯ ಬಸುರಿತನದ ಸಂತಸವು ಮೃದುತ್ವ ಮೂಡಿಸಿತು.  ಸೊಸೆಯೊಳಗೆ ಜೀವ ಮೂಡಿದೆ ಎಂಬ ಸತ್ಯ ತಿಳಿದ ಕ್ಷಣ, ಆಕೆಯ ಕಠೋರತೆ  ಕ್ಷಣಾರ್ಧದಲ್ಲಿ ಕರಗಿ ಹೋಗಿತ್ತು.ಕಾಡುತ್ತಿದ್ದ ಅಸಮಾಧಾನ ಮನಸ್ಸು, ತಾನೇ ಅರಿಯದಂತೆ ಮಗು ಬರುವ‌ ನೆನಪುಗಳಲಿ ತೆಲಾಡಲಾರಂಭಿಸಿತು.ಸೊಸೆಯ ಹೊಟ್ಟೆಯ ಮೇಲೆ  ಕೈ ಇಟ್ಟು ಇಟ್ಟು ನೋಡುವರಂತೆ ಅತ್ತೆ“ಇವಳೊಳಗೆ ನನ್ನ ಮನೆಯ ಭವಿಷ್ಯ ಉಸಿರಾಡುತ್ತಿದೆ” ಎಂಬ ಭಾವನೆಯು ಎದೆಗಿಳಿದು ಪ್ರೀತಿ ಉಕ್ಕಿ ಹರಿಯುತ್ತಿರೆ……ಬಿರುಸಾದ ಮಾತುಗಳ ಮೃದು ಎಚ್ಚರಿಕೆಯ ಮಾತು ಗಳಾದವು……!!!ಅತ್ತೆಗೆ..ಸೊಸೆಗೆ ಕಣ್ಣು ತಪ್ಪಿಸಿ ನೋಡಿದರೂ, ಆ ನೋಟದಲ್ಲಿ  ಕಾಳಜಿ ಇತ್ತು. ಬಸೂರಿಯಾಗಿರುವ ಸೊಸೆಯಲ್ಲಿ  ತಾನು ಹಗಲಿರಳು ಕಾಣಿಸುತ್ತಿರುವ ಕನಸಿನ ಪ್ರತಿಬಿಂಬ ಕಂಡಂತೆ ಆಯಿತು.ತಾನೇ ತಾಯಿ ಆದಷ್ಟು ಸಂತಸ ತಂದಿತ್ತು. ಕಠೋರತೆಯ ಹಿಂದೆ ಹೂತುಹೋದ ತಾಯಿಯ ಹೃದಯ, ಆ ಕ್ಷಣಗಳಲ್ಲಿ ನಿಧಾನವಾಗಿ ಹೊರಸುಸಲಾರಂಭಿಸಿತು.ನಿನ್ನೆವರೆಗೆ ನೋವಿನ ಮೂಲವಾಗಿದ್ದ ಅತ್ತೆಯೇ, ಆ ದಿನದಿಂದ ಸೊಸೆಗೆ  ಧೈರ್ಯವಾಗಿ ನಿಂತಳು. ಬಸೂರಿಯಾದ ಆ ಸತ್ಯ, ಇಬ್ಬರ ನಡುವಿನ ಗೋಡೆಯನ್ನು ಕರಗಿಸಿ, ಪ್ರೀತಿಗೆ ದಾರಿ ಮಾಡಿಕೊಟ್ಟಿತು…..!!!! ಜಯದೇವಿ ತಾಯಿಯವರು ವಾಸವಾದ ಕೋಣೆ  ಮಕ್ಕಳಿಗಾಗಿ ಪ್ರಯಾಗಬಾಯಿಯು ಕಂಡ ಕಂಡ ದೇವರಿಗೆ ಹರಕೆಯನ್ನು ಹೊತ್ತು ನೂರಾರು ದೇವರಗಳನ್ನು ಜಗಲಿಯ ಮೇಲೆ ಇಟ್ಟು ಪೂಜೆ ಮಾಡುತ್ತಿದ್ದರು. ತಿಳಿದು ತಿಳಿಯದೇ ಅನೇಕ ತರದ ಪೂಜೆಗಳಲ್ಲಿ ನಿರತರಾಗುತ್ತಿದ್ದರು. ಇಂದು ಅವರ ಕನಸು ನನಸಾಗಲಿರುವದೆಂದು ಅವರ ಸಂತಸಕ್ಕೆ ಮೇರೆ ಇರಲಿಲ್ಲ.ತಾಯಿ ಸಂಗವ್ವನವರು ಸಂತಸದಿಂದ ಮಗಳ ಬಯಕೆಯ ತರಹದ ಅಡಿಗೆ ಮಾಡಿ ಉಣಿಸಲಾರಂಭಿಸಿದರು. ಸರ್ವಸಾಮಾನ್ಯವಾಗಿ ಮಹಾರಾಷ್ಟ್ರದಲ್ಲಿ (ಚೊರ್ ಚೋಳಿ) ಕಳ್ಳ ಕುಬಸ ಮಾಡಿ….. ಮುಂದೆ ದೊಡ್ಡ ಕುಬಸದ ಕಾರ್ಯವನ್ನು ಮಾಡುವಂತೆ ಐದನೇ ತಿಂಗಳಿಗೆ ಸಿಮಂತದ ದೊಡ್ಡ ಕಾರ್ಯಕ್ರಮವನ್ನು ಮಾಡಿ ಎಲ್ಲ ಅತ್ತೆಯಂದಿರಿಗೆ ಭರ್ಜರಿಯಾದ ಪಿತಾಂಬರಾದ ಸೀರೆಯನ್ನು ಉಡಿಸಿ ಅವರನ್ನೆಲ್ಲ ಆನಂದ ಪಡಿಸಿದರು. ಮೊದಲ ಸಲ ಗರ್ಭಿಣಿ ಆದವರಿಗೆ ಅನೇಕ ತರದ ಸೀಮಂತದ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತದೆ. ಬೆಳದಿಂಗಳ ಕುಬಸು ,ಸೂರ್ಯೋದಯ ಕುಬಸು (ಜೋಪಾಳ) ಉಯ್ಯಾಲೆ ಕುಬಸ ,ನಾವೆಯ ಕುಬಸ, ಸಮುದ್ರ ತೀರದ ಕುಬುಸ , ಒಳಕುಬಸ ಹೊರ ಕುಬಸ,ದೇವರೆದುರಿನ ಕುಬಸ, ಸಣ್ಣ ಕುಬಸ ,ದೊಡ್ಡ ಕುಬಸ…. ಹೀಗೆ ಅನೇಕ ತರದ ಕುಬಸುಗಳನ್ನು ಮಾಡಲಾಗುವದು ಅವುಗಳನ್ನೆಲ್ಲವನ್ನು ಆಚರಿಸಲಾಯಿತು. ಇಲ್ಲಿ ಬೆಳದಿಂಗಳ ಕುಬಸ ಅಂದರೆ ಚಂದ್ರನ ದಿವ್ಯ ಬೆಳಕಿನಲ್ಲಿ ಆ ಬೆಳಕಿನ ಬಣ್ಣದ ಸೀರೆಯನ್ನು ಉಡಿಸಿ ಹೂವು ಮೂಡಿಸಿ ಆ ಬಿಳಿ  ಬಣ್ಣದ ಸಿಹಿ ಊಟವನ್ನು ತಯಾರಾಸಿ ಉಣಬಡಿಸುವರು. ಇನ್ನು ಸೂರ್ಯೋದಯದ ಕುಬುಸ ಅಂದರೆ ಸೂರ್ಯನ ಬಣ್ಣದ ಸೀರೆ ಉಡಿಸಿ ಅದೇ ಬಣ್ಣದ ಹೂಗಳನ್ನು ಮೂಡಿಸಿ ಸೂರ್ಯನ ಕಿರಣಗಳ ಮಧ್ಯ ಕೂಡಿಸಿ,ಹೊಂಬಣ್ಣದ   ಮೃಷ್ಟಾನ್ನ ಅಡುಗೆ ಮಾಡಿ ಉಣ ಬಡಿಸುವರು. “ಉಯ್ಯಾಲೆಯ ಕುಬುಸು”ಅಂದರೆ ಉಯ್ಯಾಲೆಗೆ ಹೂವುಗಳಿಂದ  ಅಲಂಕರಿಸಿ ಬಣ್ಣ ಬಣ್ಣದ ಬಟ್ಟೆ ವಸ್ತ್ರಗಳನ್ನು ಉಡುಗೆ ತೊಡಿಸಿ ತರ ತರಹದ ಅಡುಗೆ ಉಣಬಡಿಸುವರು .ಇನ್ನು “ನಾವೆಯ ಕುಬಸು”ಎಂದರೆ ದೋಣಿಯಲಿ ಕುಡಿಸಿ ನೇರವೆರಿಸುವರು. ಶಿವಯೋಗಿ ಸಿದ್ದರಾಮೇಶ್ವರರು ಕಟ್ಟಿದ ಕೆರೆಯಲ್ಲಿ ದೋಣಿಗಳಲಿ ಕುಬುಸ ಹೂಡಲಾಯಿತು.ಶಿವಯೋಗಿ ಸಿದ್ದರಾಮೇಶ್ವರನ ದರ್ಶನಕ್ಕೆ ಬಂದ ಯಾತ್ರಿಕರು ಧೋಣಿಗಳಲ್ಲಿ‌ ವಿಹರಿಸ ಬಹುದಾಗಿದೆ. ಈಗಲೂ ಭಕ್ತಾದಿಗಳು ದೋಣಿಯಲ್ಲಿ ಕುಳಿತು ಆನಂದಿಸುವ ವ್ಯವಸ್ಥೆ ಇದೆ.ಜಯದೇವಿ ತಾಯಿಯವರಿಗಾಗಿಯೇ ಒಂದು ದೊಡ್ಡ ದೋಣಿಯನ್ನು ಅಲಂಕರಿಸಿ ಕೆರೆಯ ಮಧ್ಯದಲ್ಲಿ ಸಿಮಂತದ ಆಚರಣೆ  ಮಾಡಲಾಯಿತು.ದೇವರೆದುರಿನ ಕುಬಸು ಅಂದರೆ ವಿಶೇಷವಾಗಿ ಸಿದ್ದರಾಮನ ಗರ್ಭಗುಡಿಯ ಎದುರು ಕೂಡಿಸಿ ಅವನೆದುರಿಗೆ ಕುಬಸನ್ನು ಮಾಡಿ ಆನಂದಿಸಿದರು. ಅಲ್ಲಿ ಹತ್ತಿರದಲ್ಲಿರುವ ರೇವಣಸಿದ್ದೇಶ್ವರ ದೇವಾಲಯದಲ್ಲಿ ಕುಬಸಿನ ಕಾರ್ಯ ಹಮ್ಮಿಕೊಳ್ಳಲಾಗಿತ್ತು.ಅನೇಕಾಅನೇಕ ತರದ ಕುಬುಸಗಳನ್ನು ಮಾಡಿ ಕಣ್ಮನ ತುಂಬಿಕೊಂಡರು ಅತ್ತೆಯ ಮನೆಯವರು ಹಾಗೂ ತವರಿನವರು.ಇನ್ನೂ ಬಂಧು-ಬಳಗದವರು ಅಂದರೆ ದಿನಕ್ಕೆ ಮೂರು ನಾಲ್ಕು ಮನೆಯವರಿಂದ ಆಮಂತ್ರಣ ಬರುವುದು ಅಲ್ಲಿ ಎಲ್ಲಾ ಕಡೆಗೂ ಹೋಗಿ ಅವರ ಆದರ ಆಥಿತ್ಯವನ್ನು ಸ್ವೀಕರಿಸಿ ಊಟ ಮಾಡಲೇ ಬೇಕಿತ್ತು. ಆದರೆ ಜಯದೇವಿ ತಾಯಿಯವರು ಅತ್ಯಂತ ನಾಜಕಿನ ಆರೋಗ್ಯದ ಸ್ಥಿತಿ ಇದ್ದಿದ್ದ ಕಾರಣ ಹೆಚ್ಚು ಉಣ್ಣಲಾಗುತ್ತಿರಲಿಲ್ಲ.ಆದರೂ ಬಳಗದವರ ಪ್ರೀತಿಯ  ಒತ್ತಾಯಕ್ಕೆ ಮಣಿದು ಸ್ವಲ್ಪ ಹೆಚ್ಚಿಗೆ ಊಟ ಮಾಡಬೇಕಾಗುತ್ತಿತ್ತು.   ಹೀಗಾಗಿ ಬಹಳಷ್ಟು ಸೋತು ಸೋತು ಬರುತ್ತಿದ್ದರು. ಅಂತ ತಾಯಿಯವರು ಹೇಳುತ್ತಿದ್ದರು. ಅದು  ಮುಂದೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿತ್ತು ಅಂತ ಹೇಳುತ್ತಿದರು.“ಯಾರ ಒತ್ತಾಯಕ್ಕು ನಾವು ಊಟವನ್ನು ಹೆಚ್ಚಿಗೆ ಮಾಡಬಾರದು ನಮ್ಮ ದೇಹಕ್ಕೆ ಎಷ್ಟು ಬೇಕು ಅಷ್ಟನ್ನೇ ನಾವು ಸ್ವೀಕರಿಸಬೇಕು” ಮುಂದೆ ದೀರ್ಘಕಾಲದ ದುಷ್ಪರಿಣಾಮಗಳು ಶರೀರದ ಮೇಲೆ ಆಗುವ ಅನ್ನುತ್ತಿದ್ದರು. ಜಯದೇವಿ ತಾಯಿಯವರು ಪತಿ ಚೆನ್ನಮಲ್ಲಪ್ಪ ಲಿಗಾಡೆಯವ ಜೊತೆ ಅದೊಂದು ದಿನ ಮಗು ಭೂಮಿಗೆ ಬರುವ ಸಮಯವು ಬಂತ್ತು .ಅತ್ಯಂತ ಸುಂದರವಾದ ಮಲ್ಲಿಕಾರ್ಜುನನ್ನೇ ಹೊಲುವ ಮಗನನ್ನು ಜನ್ಮ ಕೊಟ್ಟರು. ಸೋನ್ನಲಿಗಿಯ ಸಿದ್ದರಾಮೇಶ್ವರರು ಆರಾಧಿಸುವ ದೈವ ಸಾಕ್ಷಾತ್ ಮಲ್ಲಿಕಾರ್ಜುನನೇ ಹುಟ್ಟಿ ಬಂದನು ಎನ್ನುವ ಸಂತಸದಲ್ಲಿ ಆ ಮಗುವಿಗೆ ಮಲ್ಲಿಕಾರ್ಜುನ ಅಂತನೇ ಹೆಸರಿಸಲಾಯಿತು‌ಅತ್ತೆಯಂದಿರಗೆ ಎಲ್ಲಿಇಲ್ಲದ ಸಂತಸ … ಅದೆಷ್ಟೋ ದಿನಗಳಿಂದ ಮಕ್ಕಳಿಗಾಗಿ ಪರಿತಪಿಸುತ್ತಿರುವ ಲಿಗಾಡೆಯ ಮನೆತನದಲ್ಲಿ ಗಂಡು ಮಗ ಜನಿಸಿತು ಹೇಳತೀರದ ಆನಂದ ತುಂಬಿತುಳುತ್ತಿತ್ತು . ಆದರೆ ವಿಧಿಯ ಆಟವೇ ಬೇರೆಯಾಗಿತ್ತು…ಮಗು ಹುಟ್ಟಿದ ಸಲ್ಪ ದಿನದಲ್ಲಿ ತೀರಿಕೊಂಡಿತ್ತು. ಅದೇ ತಾನೇ ಸಂತಸ ಗೊಂಡಿರುವ ಎರಡು ಮನೆಗಳಲ್ಲಿ ಕತ್ತಲೆ ಆವರಿಸಿ ದಂತಾಗಿತ್ತು ……  ಅತಿವ ನೋವುಉಂಟು ಮಾಡಿತು-ಬರಿದಾದ ಮಡಿಲು…… ಖಾಲಿತನವಷ್ಟೇ ಉಳದಿತ್ತು.ಸುಂದರವಾದ ಗಂಡು ಮಗುವಿನ ಉಸಿರಿನ ತಾಪ ಇನ್ನೂ ತಾಯಿಯ ಎದೆಯಲ್ಲೇ ಉಳಿದಿತ್ತು. ಮುದ್ದು ಮಗುವಿನ ಅಳು…..ನಿದ್ರೆಯಲ್ಲೂ ನಗುವ-ನಗೆ….ಇಗ ಆ ನಗು-ಅಳು ಮೌನವಾಗಿವೆ. ಹಾಸಿಗೆಯ ಮೇಲೆ ಮಡಚಿಟ್ಟ ಚಿಕ್ಕ ಚಿಕ್ಕ ಬಟ್ಟೆಗಳ ನೋಡಿ ತಾಯಿಯ ಕಣ್ಣಿರು ಮಳೆಯಾಗಿ ಹರಿದವು. ಅಳು ಕೇಳಿಸದೇ ಹೃದಯವೇ ಕಿತ್ತು ತಿನ್ನುತ್ತಿತ್ತು……ಒಮ್ಮೆ ಅವನನ್ನು ಹೊತ್ತ ಕೈಗಳು ಇದೀಗ ಖಾಲಿಯಾಗಿ ಗಾಳಿಯನ್ನು ಅಪ್ಪಿಕೊಳ್ಳುತ್ತಿವೆ……ಹಾಲು ತುಂಬಿದ ಎದೆ ಮಗುವಿಲ್ಲದ ನೋವಿನಿಂದ ಕಲ್ಲಾಗಿತ್ತು……. ಮನ ಕಲ್ಲಾಗಿತ್ತು….ssssss ಮುಂದೆ ತಾಯಿಯವರು ಇದನ್ನು ಬಹಳ ಅತ್ಯಂತ ಸುಂದರವಾಗಿ ವರ್ಣಿಸುತ್ತಾರೆ…… ಅಳುತ್ತಿದ್ಯಾ ಕಂದಾ ಅಳುವೆಯಾ? ನಿನ್ನ ಹಿಂದಣ ಜನುಮದ ಕೊಳೆ ತೊಳೆಯಲೆಂದು !!ಪಲ್ಲವಿ!! ತಾಯಿಯ ಗರ್ಭದಲ್ಲಿ ಕೈಕಾಲುಗಳ  ಕಟ್ಟಿಬಾವಿಯೊಳು ಈಸಲು ಇಳಿಸಿದರೆಂದು!! ಮುಸುಕಿನೊಳಗೆ ಕಟ್ಟಿ ಬಿಸಿ ಎಡಬಲದಲ್ಲಿ ಉಸಿರಿಸಲು ನಿನಗೆ  ಬರಲಿಲ್ಲವೆಂದು !! ಬರಿ ಕಾಯದಿಂದಲಿ ಧರೆಮೇಲೆ ಬೀಳುತಮುಟ್ಟು ಹೇಸಿಕೆಯಲಿ ಹೊರಳಾಡಿದೆನೆಂದು!!ಹಿಂದಣ ಜನುಮದ ತಾಯಿ ತಂದೆಗಳಿಲ್ಲಬಂದು ಬಳಗ ಎನಗೆ ಇಂದಿಲ್ಲವೆಂದು !! ಮೊಲೆ ಹಾಲು ಉಣಿಸುತ ಬಲು ಪ್ರೀತಿಯಲಿತಾಯಿ ಜಾಲದೊಳಗೆ ನಿನಗೆ ಕೊಳ್ಳುವಳೆಂದು!! ಹಿಂದಣ ಸುಖ ದುಃಖ ಇಂದು-ನೆನ್ನೆ ನೆನೆದುಬಿಕ್ಕಿಬಿಕ್ಕಿ ಅಳುವಿ ಏನು ತಿಳಿಯದೆಂದು!! ಹಿಂದಣದ ಪರಿ ಮತ್ತೆ ಮುಂದೆ ಬರುವುದೆಂದು  ಬಂಧನ ಇದು ಈಗ ಬೇಸರಗೊಂಡು !! ಒಂಟಿಗನಾಗಿ ಬಂದು ಹೊಂಟು ಹೋಗುವದೇ  ನೆಂಟರು ಎನಗಿಲ್ಲ ಯಾರಿಲ್ಲವೆಂದು,ಹೋದೆಯಾ!!ಅಳುತ್ತಿದ್ಯಾ ಕಂದಾ ಅಳುವೆಯಾ?  ನಿನ್ನ ಹಿಂದಣ ಜನುಮದ ಕೊಳೆ ತೊಳೆಯಲೆಂದು !!ಪಲ್ಲವಿ (ತಾರಕ ತಂಬೂರಿ-ಕವನ ಸಂಕಲನ)ಈ ಕವನದಿ ಅಡಕವಾದ ಸಾರಾಂಶ ಅತ್ಯಂತ ಗಂಭೀರವಾದ-ತಾತ್ವಿಕ ಹಾಗೂ ಕರುಣಾಜನಕವಾದ ಭಾವವನ್ನು ಹೊತ್ತುಕೊಂಡಿದೆ.ಈ ಕವನವು ಮಗು ಅಳುವಿಕೆಗೆ ಕಾರಣವಾಗಿರುವ ಅಜ್ಞಾತ -ನೋವಿನ ಹಿಂದೆ ಇರುವ ಹಿಂದಿನ ಜನ್ಮದ ಪಾಪ–ಪುಣ್ಯ, ಸುಖ–ದುಃಖ ಮತ್ತು ಜೀವನದ ಅನಿವಾರ್ಯ ಬಂಧನಗಳನ್ನು ಪ್ರಶ್ನಿಸುವ ತಾಯಿಯ ಅಂತರಾಳದ ಮಾತುಗಳಾಗಿ ರೂಪಗೊಂಡಿವೆ.ತಾಯಿ ಮಗುವಿನ ಅಳುವನ್ನು ಕೇವಲ ಹಸಿವು ಅಥವಾ ಅಸೌಖ್ಯವೆಂದು ನೋಡದೆ, “ನಿನ್ನ ಹಿಂದಿನ ಜನ್ಮದ ನೋವುಗಳು ಈಗ ಅಳುವಾಗಿ ಹೊರಹೊಮ್ಮುತ್ತಿವೆಯೇ?” ಎಂದು ಭಾವಿಸುತ್ತ ಗರ್ಭದಲ್ಲೇ ಅನುಭವಿಸುವ ಬಂಧನ,ಜನನದ ವೇಳೆ ಉಸಿರಾಟದ ಸಂಕಟ,ಬಟ್ಟೆಯಿಲ್ಲದ ದೇಹದೊಂದಿಗೆ ಈ ಲೋಕಕ್ಕೆ ಬೀಳುವ ಅಸಹಾಯಕತೆ,ಹೋದ ಜನುಮದಲ್ಲಿ ಇದ್ದ ತಾಯಿ–ತಂದೆ ಬಂಧು–ಬಳಗವಿಲ್ಲದ ಏಕಾಂತತೆ.. ಹಿಂದಣ ಜನುಮದ ಜೀವನ,ಮೊಲೆಹಾಲು, ತಾಯಿಯ ಪ್ರೀತಿ ಸಿಗುವುದೇ ಎಂಬ ಅನಿಶ್ಚಿತತೆ….. ಇವೆಲ್ಲವನ್ನು ಹಿಂದಿನ ಜನ್ಮದ ಕರ್ಮಫಲಗಳ ಪರಿಣಾಮವಾಗಿ “ಮನುಷ್ಯ ಒಂಟಿಯಾಗಿ ಬಂದು,ಒಂಟಿಯಾಗಿಯೇ ಹೋಗುವವನು”—ಎಂಬ ಜೀವನದ ಸತ್ಯವನ್ನು ತಿಳಿಸಲಾಗಿದೆ. ಬಂಧುಗಳು, ಸಂಬಂಧಗಳು ಎಲ್ಲವೂ ಕ್ಷಣಿಕವೆಂಬ ತತ್ವವನ್ನೂ ಈ ಕವನ ಒತ್ತಿಹೇಳುತ್ತದೆ. ಅಂತಿಮವಾಗಿ ಮಾನವ ಜೀವನವು ಕರ್ಮಬಂಧನದಿಂದ ನಿಯಂತ್ರಿತ, ನೋವು ಸಹಜ, ಅಳುವು ಅಜ್ಞಾನದಿಂದ ಹೊರಡುವ ಪ್ರತಿಕ್ರಿಯೆ ಎಂಬ ತಾತ್ವಿಕ ಸಂದೇಶವನ್ನು ಸಾರುತ್ತದೆ. ಒಟ್ಟಿನಲ್ಲಿ ಮಗುವಿನ ಅಳುವಿನ ಮೂಲಕ ಮಾನವ ಜನ್ಮದ ನೋವು, ಕರ್ಮಸಿದ್ಧಾಂತ ಮತ್ತು ಬದುಕಿನ ಏಕಾಂತ ಸತ್ಯವನ್ನು ಪ್ರಶ್ನಿಸುವ ತಾತ್ವಿಕತೆ ಭರಿತವಾದ ಆಧ್ಯಾತ್ಮಿಕ ಮೆರಗು ಈ ಕವನಕ್ಕಿದೆ. ಹೀಗೆ ಗಾಢವಾದ ನೋವನ್ನು ಹೊತ್ತ ತಾಯಿ, ಕೈಯಲ್ಲಿ ಆಡುವ ಚೊಚ್ಚಲ ಮಗನನ್ನು ಕಳೆದುಕೊಂಡು ಬರಿ ಕೈಯಿಂದ ತವರು ಮನೆಯಿಂದ ಗಂಡನ ಮನೆಗೆ ಹೋಗುವ ಹೃದಯಾಂತಕ ಸನ್ನಿವೇಶ ಮುಂದಿನವಾರ ನೋಡೋಣ……….( ಮುಂದುವರೆಯುವುದು) ಸವಿತಾ ದೇಶಮುಖ ಡಾ. ಜಯದೇವಿತಾಯಿ ಲಿಗಾಡೆಯವರ ಮೊಮ್ಮಗಳು, ತಂದೆ-ಡಾ. ಶಂಕರಣ್ಣ ಮೂಗಿ (ಸೋವಿಯತ್ ಲ್ಯಾಂಡ್

Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ ಕಂತು-ಐದು ಸವಿತಾ ದೇಶಮುಖ ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾಚೇತನ ಜಯದೇವಿ ತಾಯಿಯವರ ಜೀವನ ವೃತ್ತಾಂತಭಾಗ- 5  ಸೊಲ್ಲಾಪುರದ ಲಿಗಾಡೆಯವರ ಮನೆತನದ ನಿಷ್ಠಾವಂತ ವಕೀಲರಾದ ‘ರಾಮಭಾವು ರಾಜವಾಡೆ’ ಅವರು ಬ್ರಿಟಿಷರ ವಿರುದ್ಧ ಕುತಂತ್ರ ಎಸಗಿದ್ದಕ್ಕಾಗಿ ಬಂಧಿಸಲಾಗಿತ್ತು. ಜಯದೇವಿ ತಾಯಿಯವರ ಅತ್ತೆ ಪ್ರಯಾಗಬಾಯಿ ರಾಜವಾಡೆಯವರ ಬಿಡುಗಡೆಯ ನಂತರ ಅತ್ಯಂತ ಆದರದಿಂದ ಬರಮಾಡಿಕೊಂಡು ಆದರಿಸಿ  ಬ್ರಿಟಿಷರ ಭಿಡೆ ಹಿಡಿಯದೆ  ಮತ್ತೆ ಆಸ್ತಿಯ ಕಾರಭಾರವನ್ನು ನಿರ್ವಹಿಸಿಕೊಂಡು ಹೋಗಲು ಅಣಿ ಮಾಡಿದರು.” ಪ್ರಯಾಗಬಾಯಿಯ ಕಠೋರ ಧ್ವನಿ …ಬಿರುಸು ನಡತೆ ಇದ್ದರೂ ನಿಜವಾದ ದೇಶಪ್ರೇಮ ರಾಷ್ಟ್ರ ನಿಷ್ಠೆಯನ್ನು ತೋರಿದರು .ತಾಯಿ ಸಂಗವ್ವ ಗಾಂಧಿ ವಾದವನು ಪ್ರಚಾರ ಮಾಡಿದರೆ ಅತ್ತೆ ಪ್ರಯಾಗಬಾಯಿಯೂ ಅದನ್ನು ನಡೆದು ತೋರಿಸಿದ್ದರು. ದೇಶಮಾತೆಗೆ ಅನೌಪಚಾರಿಕವಾಗಿ ಸಹಾಯ ಹಸ್ತ ನೀಡಿದ್ದರು” ಎನ್ನುತ್ತಿದ್ದರು ಜಯದೇವಿ ತಾಯಿಯವರು. ಅತ್ತೆ ಪ್ರಯಾಗಬಾಯಿ ಜಯದೇವಿಯ ತಾಯಿಯ ಮೇಲೆ ಸಿಡಿಮಿಡಿಕೊಳ್ಳಲು ಎರಡು ಕಾರಣಗಳಿದ್ದವು…. ಮದುವೆಯ ಸಮಯದಲ್ಲಿ ತವರಿನವರು(ಮಡಿಕಿ) ಮದುವೆಯ ದಿಬ್ಬಣವೆನೋ ಜನ ನೋಡುವಂತೆ ಏರಿಸಿದ್ದರು….. ಆದರೆ ಪ್ರಯಾಗಬಾಯಿಯವರಿಗೆ ಕೊಡುವ ಉಡುಗೊರೆಯ ಸೀರೆ ಅವರ ವರ್ಚಸ್ಸಿಗೆ ಹೊಂದುವಂತಿರಲಿಲ್ಲವೆಂದು ನಂಬಿದ ಅತ್ತೆ ….ಸೀರೆ ನೋಡುತ್ತಿದ್ದಂತೆ ಸಿಡಿಮಿಡಿಗೊಂಡು ಅಲ್ಲಿಂದ ಎದ್ದು ಹೋಗಿದ್ದರಂತೆ .ಇದು ಅದೆಂಥ ದೊಡ್ಡ ವಿಷಯವಾಗಿತ್ತು ಅಂದರೆ  ತಾಯಿಯವರ ಜೀವನದ ಅತಿ ದೊಡ್ಡ ಘಾತಕದ ಘಟನೆಯಾಗಿತ್ತು ಅನ್ನುತ್ತಿದ್ದರು ತಾಯಿಯವರಿಗೆ ….ಸಮಯ ಸಿಕ್ಕಾಗಲೆಲ್ಲ ಆ ಮಾತನ್ನು ಆಡಿ ಆಡಿ ಮನಸ್ಸು ನೋಯಿಸುತ್ತಿದ್ದರಂತೆ. ಮುಂದೆ ಅವರು ಅದೆಷ್ಟೋ ಸೀರೆಗಳನ್ನು ತಂದು ಅವರೆದುರಿಗೆ ಹಾಕಿದರೂ ಆ ದಿನದ ಅವರು ಮರೆಯಲಿಲ್ಲ. ಇನ್ನೊಂದು ಕಾರಣವೆಂದರೆ ತಾಯಿಯವರು ಅತ್ಯಂತ ಬಳಕುವ ಅಂದರೆ ತೆಳ್ಳನೆ ದೇಹವನ್ನು ಹೊಂದಿದವರು ಊಟ ಮಾಡುವುದು ಕೇವಲ ಅರ್ಧ ರೊಟ್ಟಿ ಅಥವಾ ಚಪಾತಿ ಅಷ್ಟೇ… ಗಟ್ಟಿ ಮುಟ್ಟಾದ ಸೊಸೆ …ಆಸ್ತಿಯ ಕಾರಭಾರ ಹೊತ್ತುಕೊಳ್ಳುವ ಸೊಸೆ ಬೇಕಾಗಿತ್ತು.  ಸೊಸೆಯನ್ನು  ಹುಡುಕಾಡಿ   ಪರಿಶೀಲಿಸಿ ಮದುವೆ ಮಾಡಿದ್ದರೇನೋ ನಿಜ ಆದರೆ ಜಯದೇವಿ ತಾಯಿಯು ಮನೆಗೆ ಬಂದ ಮೇಲೆ ಗೊತ್ತಾದದ್ದು ಇವರು ಅತ್ಯಂತ ಸರಳ-ಸಾಧು- ಲಿಂಗನಿಷ್ಠರು. ದೇವರಲ್ಲಿಯೇ ಮೈಮರೆಯುವಳು ಅನ್ನುವುದು ತಿಳಿದಾದ ಮೇಲೆ ಅವರಿಗೆ ಹೊಟ್ಟೆ ಬೇನೆ ಶುರುವಾಗಿತ್ತು.ಇಂಥ ನಾಜೂಕಾಗಿರುವಳು ಎಲ್ಲವನ್ನು‌ ನಿಭಾಯಿಸುವುದು ಹೇಗೆ ಅನ್ನುವ ಸಮಸ್ಯೆ ಕಾಡುತಿತ್ತು.  ತಾಯಿಯವರು ಕೆಲಸ ಮಾಡುವಾಗ ಮಧ್ಯದಲ್ಲಿ ಬಂದು ಅವರ ಎರಡು ಕೈಗಳನ್ನು ಗಟ್ಟಿಯಾಗಿ ಹಿಡಿದು ನೋಡಿ ಮತ್ತೆ ದೂರಸರಿಸುವರಂತೆ ..,..”ನೋಡು ಏನು ತಿನ್ನೋದಿಲ್ಲ ಹೀಗೆ ಸ್ವರ್ಗಿ  ಸ್ವರ್ಗಿ ಸಣ್ಣಗಿದ್ದಿ ಎಲ್ಲಾ ಆಸ್ತಿಯನ್ನು ಹೇಗೆ ನೋಡಿಕೊಳ್ತಿ …. ನಮಗೆ ಮೊಮ್ಮಕ್ಕಳನ್ನು ಹೇಗೆ ಹೆತ್ತು ಕೊಡ್ತೀಯಾ…”!! ಅನ್ನುವ ಚಿಂತೆ ಅವರನ್ನು ಕಾಡುತ್ತಿತ್ತಂತೆ. ಪ್ರಯಾಗಬಾಯಿಯೂ ಪ್ರತಿ ಸೋಮವಾರ ಸಿದ್ದರಾಮನ ದೇವಸ್ಥಾನಕ್ಕೆ ಗಾಡಿಯಲ್ಲಿ ಹೋಗುತ್ತಿದ್ದರು . ದೇವಸ್ಥಾನಕ್ಕೆ ಹೋಗಬೇಕಾದರೂ ಜರ್ತಾರಿಯ ಸೀರೆ ಉಟ್ಟು ವಜ್ರ ವೈಢೂರ್ಯ ತೊಟ್ಟು ಹೊರಡುವರು ..ಜಯದೇವಿ ತಾಯಿಯವರು ಅವರ ಜೊತೆ ಬರಲು ಹಠ ಮಾಡಿದಾಗ ಅವರಿಗೆ ಹಾಗೆ ಉಟ್ಟ ಸೀರಿ ಕರಿಮಣಿಯ ತಾಳಿ ಹಾಕಿಕೊಂಡೇ  ಕರೆದುಕೊಂಡು ಹೋಗುತ್ತಿದ್ದರು.ಮದುವೆ ಸಮಾರಂಭಗಳಲ್ಲೂ ಅಷ್ಟೇ ತಾಯಿಯವರಿಗೆ ಮದುವೆ ಸಮಾರಂಭಗಳು ಬಂದರೆ   ಕಳವಳ ಉಂಟಾಗುವುದು….. ಬಂಗಾರ ಇಲ್ಲದೆ ಹೋಗುವದು ಹೇಗೆ  ಮನೆತನ ಮರ್ಯಾದಿಯ ಪ್ರಶ್ನೆಯಾಗಿತ್ತು ……ಹೀಗಾಗಿ ಓಡಿಹೋಗಿ ಹತ್ತಿರದಲ್ಲಿ ಇದ್ದ ತವರು ಮನೆಯಲ್ಲಿ ಹೊಸದಾಗಿ ಬಂದ ಅತ್ತಿಗೆಯರಿಂದ,ತಾಯಿಂದ ವಸ್ತಒಡವೆಗಳನ್ನು ಪಡೆದು ತೊಟ್ಟು ಹೋಗುವರು. ಮತ್ತೆ ತಿರುಗಿ ಬರುವಾಗ ಅವುಗಳನ್ನೆಲ್ಲ ಅಲ್ಲೇ ತವರು ಮನೆಯಲ್ಲಿ ಕಳಚಿಟ್ಟು ಮನೆಗೆ ಬರುವರು .  ಪ್ರಯಾಗಬಾಯಿ ಎರಡು ಹೊತ್ತು ಲಿಂಗದ ಪೂಜೆ ಮಾಡುವರು ರಾತ್ರಿಯ ಪೂಜೆ ಮುಗಿಸಿ ಅವರಿಗೆ ಊಟ ಕೊಟ್ಟು ಆಳು ಕಾಳುಗಳಿಗೆ ಊಟ ಕೊಟ್ಟು ಎಲ್ಲ ತೆಗೆದಿಟ್ಟು ಅಡುಗೆಯ ಮನೆಯ ಕೆಲಸವನ್ನೆಲ್ಲಾ ಮುಗಿಸಿ ಮೇಲೆ ಮಲಗುವ ಕೋಣೆಯತ್ತ ಹೆಜ್ಜೆ ಹಾಕಿದಾಗ ಮನೆಯಲ್ಲಿ ಎಲ್ಲರೂ ನಿದ್ರೆಯಲ್ಲಿ ಜಾರಿರುತಿದ್ದರು. ರಾತ್ರಿ ನಿರಾಳ ಮೌನ ಆವರಿಸಿತ್ತು…. ಗಡಿಯಾರ ಟಿಕ್ ಟಿಕ್ ಮಾತ್ರ ಅವರ ಉಸಿರಿಗೆ ತಾಳ ಹಾಕುತ್ತಿತ್ತು…. ನಿಧಾನವಾಗಿ ಹೆದರುತ್ತಲೇ ಗಡಿಯಾರದತ  ನೋಡಿದರು ರಾತ್ರಿ ಒಂದು ಗಂಟೆ ಮೇಲೆ ಆಗಿದೆ…. ಕೋಣೆಯಲಿ ಕಾಲಿಡುವ ಮೊದಲೇ ತೀರ್ಪು ಬಂದುಬಿಟ್ಟಿತು ……..”ಗಂಡನ ಮೇಲೆ ಭಯ ಭಕ್ತಿ ಇಲ್ಲ ಅದಕ್ಕೆ ಇಷ್ಟು ತಡ ಮಾಡುವೆ ಅಲ್ಲೇ ಮೂಲೆಯಲ್ಲಿ ಸ್ಟ್ಯಾಂಡ್ಪ್ಪ(standup)ಅಂದು ಗಂಡನ  ಧ್ವನಿ ಕೇಳಿದ ತಕ್ಷಣ ಹೆದರಿ ಅಲ್ಲಿ ಗೋಡೆಗೆ ಬೆನ್ನೂರು ನಿಂತು ಬಿಡುವರು ತನ್ನ ತಪ್ಪಾದರೂ ಏನು ಅಂತ ತಿಳಿಯದೆ ಗಂಡನ ಆಜ್ಞೆ ಅಲ್ಲವೇ ಪಾಲಿಸಲೇಬೇಕು….!! ಆದರೆ ಮಧ್ಯರಾತ್ರಿಯಲಿ  ಹಾಗೆ ಕೋಣೆ ಮೂಲೆಯಲ್ಲಿ ನಿಂತು ನಿದ್ದೆ ಹೋಗಿ ಭೂತಾಯಿಯ ಮಡಿಲಲ್ಲಿ ಶರಣಾಗಿ ಮಲಗಿದ್ದು ಗೊತ್ತಾಗುತ್ತಿರಲಿಲ್ಲ….. ನಸುಕಿನಲ್ಲಿ ಗಡಬಡಿಸಿ ಎದ್ದರೆ ತಾವು ನೆರೆದ ಮೇಲೆ ಮಲಗಿದ್ದು ಅರಿವಾಗುತ್ತಿತ್ತು ಮೈ ಕೈಯಲ್ಲ ಇನ್ನಷ್ಟು ನೋವಾದರೂ ಕೆಳಗೆ ಇಳಿದು ಓಡಿ ಬಂದರೆ ಅಲ್ಲಿ ಅತ್ತೆಯ ಬೈಗಳ ಸುರಿಮಳೆ ಪ್ರಾರಂಭ ……!!!ಗಂಡ ಮಾತ್ರ ಏನು ನಡೆಯಲೇ ಇಲ್ಲ ಅನ್ನುವಂತೆ ಎದ್ದು ಕೆಳಗೆ ಬರುವರು ಅವರಿಗೆ ಯಾವ ವ್ಯವಹಾರಿಕ ಜ್ಞಾನ ಇಲ್ಲ ತನಗೆ ತಿಳಿದಷ್ಟು ನಡೆದುಕೊಳ್ಳುವರು ಏಕೆಂದರೆ ಐದು ಅತ್ತಿಯಂದಿರ ಅಚ್ಚುಮೆಚ್ಚಿನ ಮಗ ಬೇರೆ… ಮದುವೆಯಾದ ಹೊಸತರಲ್ಲಿ ಜಯದೇವಿ ತಾಯಿಯವರಿಗೆ ತಾನು ಎಲ್ಲಿ ಬದುಕಿ ಬಾಳುತ್ತಿದ್ದೇನೆ  ಅನ್ನುವ  ಜ್ಞಾನವೇ ಇಲ್ಲವಾಗಿತ್ತು ಅಂತ ತಾಯಿಯವರು ಹೇಳುತ್ತಿದ್ದರು . “ಗಂಡನ ಮನೆಯ ಎಲ್ಲ ಸದಸ್ಯರ ಮನಸ್ಸು ಗೆಲ್ಲ ಬೇಕಾಗಿತ್ತು. ಸಿದ್ದರಾಮನಲ್ಲಿ ಸೈ ಎನ್ನಿಸಿಕೊಳ್ಳಬೇಕಾಗಿತ್ತು. ಬಂದ ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಹಾಗೆ ನುಂಗುತ್ತ ನಡೆದಿದೆ” ಅನ್ನುತ್ತಿದ್ದರು. ತಮ್ಮ ದುಃಖವನ್ನೆಲ್ಲ ಅಂಗೈಯಲ್ಲಿ ಇಟ್ಟುಕೊಂಡ ಲಿಂಗನಿಗೆ ಹೇಳುತ್ತಾ ಸಿದ್ದರಾಮನನ್ನು ಮಾತನಾಡಿಸುತ ದುಃಖವನ್ನು ಮರೆಯುವರು…. ಧಾರಾಕಾರವಾಗಿ ಕಣ್ಣೀರು ಸುರಿಸುವರು… *ನಿನ್ನ  ಭಜಿಸಲೆಂದು ಉಲಿಯುವೆ ಜಯಗೀತ ಒಂದೊಂದು, ನನ್ನ ಜೀಯಾನಿನ್ನ ಬರುವಿಕೆಯ ಬಯಕೆ-ನೆನೆ ನೆನೆದು ಅಳಹೋಗಿಹಾಡು ಬಿಡುವೆ !!*(ಜಯಗೀತ ಕವನ ಸಂಕಲ) ಒಂದು ಕಡೆ ಬರುತ್ತಾರೆ ತಾಳ್ಮೆನು ಯಾತನೆಯ/ ಬಾಳುವೆನು ನಿನಗಾಗಿಕಾಳ ಬಂದರು ಹೆದರೇನು -ಸಿದ್ದರಾಮದಾಳಿ ತಂದರು ಮತ್ತೆ ನಿನ್ನನೇ ನೆನೆಯುವೆ!! “ಎಲ್ಲವೂ ನಿನ್ನ ಪಾದಕ್ಕೆ ಅರ್ಪಣೆ… ಎನ್ನ ಮಾನ ಅಪಮಾನ ನಿನ್ನದಯ್ಯಾ ಎನ್ನುತ್ತಿದ್ದೆಕಷ್ಟಗಳು ಹೆಚ್ಚಿದಂತೆ ಸಿದ್ದರಾಮನ ಮೇಲಿನ ಭಕ್ತಿ ಇನ್ನು  ಗಟ್ಟಿಕೊಳ್ಳಲಾರಂಬಿಸಿತ್ತು.  ಸುಖದ ಸಂಪತ್ತಿನಲ್ಲಿ ನಾನು ಸುಖವಾಗಿ ಒಂದು ವೇಳೆ ಬದುಕಿದ್ದರೆ …. ಸಿದ್ದರಾಮನನ್ನು ನೆನೆಯುತ್ತಿರಲಿಲ್ಲವೇನು…??!…ಸಿದ್ದರಾಮ ಪರೀಕ್ಷಿಸುತ್ತಿರುವ ನಾನು ಆ ಪರೀಕ್ಷೆಯಲ್ಲಿ ಪಾಸ್ ಆಗಲೇಬೇಕು ಎನ್ನುವ ಛಲವನ್ನು ಹೊತ್ತ ಸೊಸೆಯಾಗಿದ್ದೆ ” ‌….ಅಂತ ಅನೇಕ ಸಲ ಹೇಳುತ್ತಿದ್ದರು. ತಾಯಿಯ ತವರಿನಲ್ಲಿ  ಹೆಣ್ಣು ಮಕ್ಕಳಿಗೆ ಸಮಾನತೆ ಹೇಳಿಕೊಟ್ಟಿದ್ದರು. ಪುರುಷ ಪ್ರಧಾನವಾದ ನಮ್ಮ ದೇಶದಲ್ಲಿ ಗಂಡನಿಗೆ ಹೊಂದುಕೊಳ್ಳಬೇಕಾದರೆ ಸಹನೆ ಇರಬೇಕು ಆಗ ಮುಂದೆ ಎಲ್ಲವನ್ನು ಗೆಲ್ಲಬಹುದು ಅನ್ನುವುದನ್ನು ತಾಯಿ ಸಂಗವ್ವ ಜಯದೇವಿ ತಾಯಿಯವರಿಗೆ ಕಲಸಿದ ಪಾಠ .ನೆನೆಯುತಿದರು.. ಬಾಲ್ಯ ವಿವಾಹ ಒಂದು ಮದುವೆ ಅಲ್ಲ ಅದು ಬಾಲ್ಯದ  ಅಂತ್ಯ. ಬೊಂಬೆಯ ಜೊತೆ ಆಟವಾಡುವ ಕೈಗಳಿಗೆ ಅಡುಗೆಯ ಪಾತ್ರೆಯ ಹೊರೆ ತಾಳೆದಾಗಿತ್ತು. ಪಾಠ ಪುಸ್ತಕ ಓದಬೇಕಾದ ಕಣ್ಣುಗಳಿಗೆ ಆಶ್ರುಗಳ ಅಭ್ಯಾಸ ಆಗಿಹೋಗಿತ್ತು. ಹೆಣ್ಣು ಮಗು ಹೆಂಡತಿಯಾಗುವ ಮುನ್ನ ಮಗುವಾಗಿ ಬದುಕುವ ಹಕ್ಕು ಕಸಿದುಕೊಂಡರೆ ಅದು ಒಂದು ಅಪರಾಧವೇ ಸರಿ ಅನ್ನುತ್ತಿದ್ದರು .ಅವಳಿಗೆ ಗಂಡನ ಮನೆ ಸಿಗುವುದು ಅನ್ನುವ ಸಂತಸವೇನು ಇರಬಹುದು ಆದರೆ ಮಗುವಿನ ಅತ್ಯ ಅಮೂಲ್ಯವಾದ ಬಾಲ್ಯದ ಬದುಕು ಸಿಹಿ ನೆನಪಿನ ಲೋಕವೂ ಕಳೆದು ಹೋಗುವುದು. ಬೆಳೆಯದ ದೇಹ- ಮನಸ್ಸಿಗೆ ತಾಳದ‌ ಹಿಂಸೆ ಕೊಟ್ಟಂತಾಗುವುದು .ಅವಳು ನಿಭಾಯಿಸಲಾರದಂತ ಜವಾಬ್ದಾರಿ  ಮಗುವಿನ ಮೇಲೆ ಒಡ್ದುವದು ಅಕ್ಷಮ್ಯ ಅಪಕೃತವಾಗುವುದು ಎನ್ನುತ್ತಿದ್ದರು.  ಒಂದು ಹೆಣ್ಣು ಮಗು ಬಾಲ್ಯದಲ್ಲಿ ವಿವಾಹ ಮಾಡಿಕೊಂಡು ಜೀವನದಲ್ಲಿ ಸೋತು ಹೋದರೆ ಸೋಲು ಅವಳೊಬ್ಬಳದೇ ಅಲ್ಲ…. ಅದು ಒಂದು ತಲೆಮಾರಿನ ಸೋಲು ,!! “ಮಗು ಕುತ್ತಿಗೆಗೆ ತಾಳಿಯಲ್ಲ – ಅವಳಿಗೆ ಭವಿಷ್ಯ ಕೊಡಿ” ಅನ್ನುತ್ತಿದ್ದರು . “ಸಿರಿತನದ ಕುವರಿ ! ಸಿರಿವಂತರ ಸತಿಯಾದೆಸಿರಿತನದ ಶ್ರಂಗಾರವೆಲ್ಲವನು- ಭೋಗಿಸಿದೆಸಿರಿತನ ದೊರೆತನ ಹಿರಿತನ ಎನ್ನವಾರಿಸದೆಶ್ರೀ ಲೋಲನ ದರ್ಶನವೆಂದು ಕಾಯುತಿರುವೆ…!!” “ಸಿರಿತನದ ತಳಕಿನಲ್ಲಿ ನಾನು ಮುಳುಗದಿರಲಿ ಅಂತಾನೆ  ಕಷ್ಟಗಳ ಕೊಡಿ  ಹರಿಸಿದ  ಸಿದ್ದರಾಮ…..ಸುಖದ ಸುಪ್ಪತ್ತಿನಲ್ಲಿ ಮುಳುಗದಿರಲಿಅಂತ ಏನೋ ಸಿದ್ದರಾಮನ ಪರೀಕ್ಷೆಯಲಿ….. ಗೆಲ್ಲಲೆಂದೆ ನಾನು ಕಷ್ಟಗಳನ್ನು ಸಂಭ್ರಮಿಸಲಾರಂಭಿಸಿದೆ. ಅನ್ನುತ್ತಾರೆ .  ಸಿದ್ದರಾಮನಲ್ಲಿ ಒಂದಾಗಲು ಶುರುವಿಟ್ಟೆ  ಲೋಕಕಲ್ಯಾಣದ ಕೆಲಸದತ್ತ ಹೊರಳಿದೆ” ಎನ್ನುವ ಮಾತು ಸುಳ್ಳಲ್ಲ . ಹಳೆಯ ಸಂಪ್ರದಾಯದ ಅತ್ತೆ ಮನೆಯ ವಾತಾವರಣ ಬೆಳೆದ ಮನೆಯ ವಾತಾವರಣಕ್ಕೂ ಅಜಗಜಾಂತರ ಅಂತರವಿತ್ತು .ಅತ್ತೆಯ ಬೈಗಳ ಪ್ರತಿ ಮಾತಿನಲ್ಲಿಯೂ ಒಳ್ಳೆಯದನ್ನು ಹುಡುಕಲು ಆರಂಭಿಸಿದರು.  ಒಂದು ಸಲ ಪಡಸಾಲಿಯಲಿ ದೊಡ್ಡ ಕನ್ನಡಿಯ ನೋಡುತ  ಜಯದೇವಿ ತಾಯಿಯವರು ಕುಂಕುಮ ಇಟ್ಟುಕೊಳ್ಳುವುದು ನೋಡಿದ ಪ್ರಯಾಗಬಾಯಿ ಜೋರಾಗಿ ಕಿರುಚಾಡಿಲಾರಂಭಿಸಿದರು .“ನಿನಗೆ ಸಂಸ್ಕಾರ ಅನ್ನೋದೇ ಇಲ್ಲ ಯಾರಾದರೂ ಅಂಗಳದಲ್ಲಿ ನಿಂತು ಕುಂಕುಮ ಇಡುವರೇ ನೀನು ಹೇಳಿ ಕೇಳಿ ಭಾಷಣ ಮಾಡುವಾಕೆಯ ಮಗಳು” ಎಂದು ಕೂಗಾಡಿದರಂತೆ.ಅವರು ಯಾಕೆ ಗದರಿಸಿದರಂತೆ ತಿಳಿಯಲಿಲ್ಲ  ಕುಂಕುಮವನ್ನು ಅಂಗಳದಲ್ಲಿ ಹಚ್ಚಿಕೊಳ್ಳಬಾರದು ಅನ್ನುವ ಪದ್ಧತಿ ಇರಬೇಕೆನೊ ಅದಕ್ಕೆ ಅತ್ತೆ ಬೈದಿರಬೇಕು ಅಂದುಕೊಂಡರಂತೆ.ಆದರೆ ನನ್ನ ತಾಯಿಗೆ ಏಕೆ ಬೈದರು ಭಾಷಣ ಮಾಡುವುದು ತಪ್ಪೇ ಅಂತೆಲ್ಲ ಲೆಕ್ಕ ಹಾಕಿದರು.ಆದರೂ ಎದೆ ನಡುಗುತಿತ್ತು, ಕೈಕಾಲುಗಳು ಶಕ್ತಿ ಕುಂದುತಿದೆ ಅನ್ನಿಸಿಲಾರಿಂಭಿಸಿತ್ತು. ಆ ದೃಶ್ಯವನ್ನು ನೋಡಿದ ಪ್ರಯಾಗಬಾಯಿಯುಸಮೀಪ ಬಂದು …”ನೋಡು ಮನೆಯಲ್ಲಿ ಹಾಲ ತುಪ್ಪದ ಹೊಳೆ ಹರಿತಾ ಇದೆ ಚೆನ್ನಾಗಿ ಉಂಡು-ತಿಂದು ಇರಬೇಕು ಅಂತ ಹೇಳಿದ್ದು ಕೇಳಿ ಜೀವ ಬಂದಂತಾಯಿತು. ಮುಂದೆ ಕೆಲವು ದಿನಗಳು ಕಳೆದ ನಂತರ ಸೊಸೆಯ ಮೇಲೆ ಪ್ರೀತಿ ಹೆಚ್ಚ ಆರಂಭಿಸಿತು ಸೊಸೆಯ ತಾಳ್ಮೆ ಗಂಭೀರ ನಡೆನುಡಿಯನ್ನು ಪ್ರಯಾಗಬಾಯಿ ಗಮನಿಸುತ್ತಿದ್ದಂತೆ ಮನ ಕರಗಲಾರಂಭಿಸಿತ್ತು. ಆಗಾಗ ತಾಯಿಯವರನ್ನು ದಿಟ್ಟಿಸಿ ನೋಡುತ್ತಿದ್ದರಂತೆ ಅದೇಕೋ ಸೊಸೆ ಇನ್ನೂ ಸಣ್ಣ ಆಗಿ ಹೋಗುತ್ತಿರುವಂತೆ ಕಂಡು ಅಡುಗೆಯ ಬಸವ್ವಳನ್ನು ಕರೆದು ಇವಳಿಗೆ “ಇನ್ನು ಮೇಲಿಂದ ನನಗಾಗಿ ಮಾಡುವ ತುಪ್ಪದ ಅಡಿಗೆ ಇವಳಿಗೂ ಉಣ್ಣಿಸಬೇಕು” ಅಂತ ಆಜ್ಞೆ ಮಾಡಿದರಂತೆ .ಅದೇ ರೀತಿ ಕೆಲಸದವಳು ಬಂದು ತಾಯಿಯವರಿಗೆ “ನೋಡಿರಿ ಬಾಯಾರ……ನೀವು ಹೀಗೆ ಕಿವುಚಿ ಅದ್ದಾ-ಗಿದ್ದಾ ಊಟ ಮಾಡಿದರೆ ನಡೆಯುವುದಿಲ್ಲ ಚೆನ್ನಾಗಿ ಊಟ ಮಾಡಬೇಕು ಗಂಡು ಮಕ್ಕಳ ಹೆತ್ತು ಕೊಡಬೇಕು “ಅಂತ  ಕೆಲಸದವಳು ಪ್ರೀತಿಯಿಂದ ಆಜ್ಞೆ ಮಾಡಿದಳಂತೆ. ಸಾಧು-ಸಂತರು ನೀರು ಕುಡಿದು ,ಇಲ್ಲ ತುಣುಕು ಅನ್ನ ಉಂಡು ಬದುಕುವಂತೆ ಜಯದೇವಿ ತಾಯಿಯವರು ಹುಟ್ಟುತ್ತಲೇ ಯೋಗಿಣಿ ಯಾಗಿದ್ದರು  ಅವರು ಕೊನೆಯವರೆಗೂ ಅವರ ಊಟ ಅಷ್ಟೇ. ಅವರು ಊಟತಿಂಡಿಗಾಗಿ  ಸಂಸಾರದ ಭೋಗಕ್ಕಾಗಿ ಹುಟ್ಟಿದವರಲ್ಲ  ಬಸವಣ್ಣನ ತತ್ವದಂತೆ ಕಾಯಕವ ಮಾಡುತ್ತಾ ಸಂಸಾರ ಗೆದ್ದು   ಮಹಾನ ಶರಣೆಯಾದವರು. ಎಲ್ಲ  ಐದು ಜನ ಓರಗಿತ್ತಿಯರನ್ನು, ಮನೆಯ ಆಸ್ತಿ , ಹೊಲಗದ್ದೆ ,ಬಡ್ಡಿಯ ವಹಿವಾಟ ಎಲ್ಲವನ್ನು ಒಬ್ಬಳೇ ನಿಭಾಯಿಸುತ್ತ………ಇದ್ದ ಆಸ್ತಿಯನ್ನು ವೃದ್ಧಿಸಿ ಮುಂದೆ ಲಿಗಾಡಿ ಮನೆತನದ ವಿಜಯ ಪತಾಕೆಯನ್ನು ಹಾರಿಸಿ, ಕನ್ನಡ ನಾಡ ನುಡಿಗಾಗಿ ದುಡಿದ, ಸಿದ್ದರಾಮನ ಶ್ರೇಷ್ಠ ಭಕ್ತಳಾಗಿ,…  ಕನ್ನಡ ಸಾಹಿತ್ಯ ಸಾರಸ್ವತ ಲೋಕಕ್ಕೆ ಮಹಾನ ಕೊಡುಗೆ ನೀಡಲಿರುವರು  ಅನ್ನುವದ  ಅರಯದಾಗಿದ್ದರು…. ಅತ್ತೆ ಪ್ರಯಾಗಬಾಯಿ….ಅಲ್ಲವೇ…..! (ಮುಂದುವರೆಯುವುದು) ಸವಿತಾ ದೇಶಮುಖ ಡಾ. ಜಯದೇವಿತಾಯಿ ಲಿಗಾಡೆಯವರ ಮೊಮ್ಮಗಳು, ತಂದೆ-ಡಾ. ಶಂಕರಣ್ಣ ಮೂಗಿ (ಸೋವಿಯತ್ ಲ್ಯಾಂಡ್ ನೆಹರು ಅವಾರ್ಡ್ ವಿಜೇತರು). ಸುಪ್ರೀಂ ಕೋರ್ಟಿನ ನ್ಯಾಯವಾದಿಗಳುತಾಯಿ -ಲಲ್ಲೇಶ್ವರಿತಾಯಿ ಮೂಗಿ(30 ಶಿವಶರಣೆಯರ ಮೊದಲು ಪರಿಚಯಿಸಿದ ಲೇಖಕಿ)ವೃತ್ತಿ:ವಿಜಯಪುರದ ಆಲ್ ಇಂಡಿಯಾ

Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾಚೇತನ
ಜಯದೇವಿ ತಾಯಿ ಲಿಗಾಡೆ ಅವರ ಜೀವನಗಾಥೆ
ಸವಿತಾ ದೇಶಮುಖ

Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಜಯದೇವಿ ತಾಯಿ ಲಿಗಾಡೆ
ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ
ಅವರಜೀವನಗಾಥೆ ಸವಿತಾ ದೇಶಮುಖ

Read Post »

You cannot copy content of this page

Scroll to Top