ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಜೀವನ

ದಿಕ್ಸೂಚಿ

ಯೋಜನೆಯ ಮೇಲೆ ದೃಷ್ಟಿ ಇರಿಸಿ ದೊಡ್ಡ ಗೆಲುವು ಸಾಧಿಸಿ ಜಯಶ್ರೀ ಜೆ.ಅಬ್ಬಿಗೇರಿ ಇದೀಗ ನಾ ಹೇಳ ಹೊರಟಿರುವುದು ಜಗತ್ಪ್ರಸಿದ್ಧ ತೇನ್ ಸಿಂಗನ ಕಥೆ ಆಗ ಆತ ಇನ್ನೂ ಚಿಕ್ಕವ. ಮನೆಯಂಗಳದಲ್ಲಿ ಕುಳಿತು ಸದಾ ಎವರೆಸ್ಟನ್ನೇ ದಿಟ್ಟಿಸುತ್ತಿದ್ದ. ಪುಟ್ಟ ಬಾಲಕನನ್ನು ಎವರೆಸ್ಟ್ ಪ್ರತಿದಿನವೂ ಪುಳಕಗೊಳಿಸುತ್ತಿತ್ತು. ಆತನನ್ನು ಕಂಡ ತಾಯಿ’ಅದೇಕೋ ದಿನವೂ ಎವರೆಷ್ಟನ್ನೇ ದಿಟ್ಟಿಸಿ ನೋಡುತ್ತಿಯಾ?’ ಎಂದು ಕೇಳಿದಳು.’ಅಮ್ಮಾ ಈ ನನ್ನ ಪುಟ್ಟ ಕಾಲುಗಳಿಂದ ಆ ದೊಡ್ಡ ಹಿಮಪರ್ವತದ ತುದಿಯನ್ನು ಮುಟ್ಟಬಲ್ಲೆನೆ? ಎಂದು ಯೋಚಿಸುತ್ತಿದ್ದೇನೆ.’ ಅದಕ್ಕೆ ತಾಯಿ ‘ಮಗೂ,ಅದು ಯಾವ ಹಕ್ಕಿಯೂ ಹಾರಲಾರದಷ್ಟು  ಎತ್ತರದ ಶಿಖರ ಆದರೆ ನೀನು ಮನಸ್ಸು ಮಾಡಿದರೆ ಅದರ ತುತ್ತ ತುದಿಯನ್ನು ಮುಟ್ಟಬಲ್ಲೆ.’ಎಂದಳು. ತಾಯಿಯ ಸ್ಪೂರ್ತಿಯ ಮಾತಿಗೆ ತೇನ್ ಸಿಂಗ್ ಹಿಮಾಲಯದ ನೆತ್ತಿಯ ಮೇಲೆ ನಿಂತು ನಗು ಚೆಲ್ಲಿದ್ದು ಈಗ ಇತಿಹಾಸ. ಕೆಲಸಕ್ಕೆ ಅಡೆ ತಡೆ: ಈ ಮೇಲಿನ ನಿಜ ಜೀವನದ ಕಥೆ ಯೋಜನೆಗೆ ಪೂರಕವಾದ ಯಶಸ್ಸಿಗೆ ಹಿಡಿದ ಕನ್ನಡಿ. ಯೋಜನೆ ಇಲ್ಲದೇ ಕೆಲಸ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಧಾವಂತದ ಕಾಯಿಲೆ . ‘ದಿನಾಲೂ ಅಂದು ಕೊಳ್ತಿನಿ ಇವತ್ತು ಆ ಕೆಲಸ ಮಾಡಬೇಕು, ಈ ಕೆಲಸ ಮಾಡಿಯೇ ಬಿಡಬೇಕು ಅಂತ ಹೀಗೇ ಎಷ್ಟೋ ದಿನಗಳಿಂದ ನೆನೆಗುದ್ದಿಗೆ ಬಿದ್ದ ಕೆಲಸಗಳ ಬುಟ್ಟಿ ಮನದ ಮೂಲೆಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುತ್ತೆ ಅದು ವಿಲೇವಾರಿಯಾಗುವ ಸಾಧ್ಯತೆ ಕಮ್ಮಿ. ವಿಪರ್ಯಾಸವೆಂಬಂತೆ ದಿನದಿಂದ ದಿನಕ್ಕೆ ಇನ್ನೂ ಹೆಚ್ಚುತ್ತಲೇ ಹೋಗುತ್ತದೆ ಹೊರತು ಕಡಿಮೆ ಆಗುವುದಿಲ್ಲ. ಇದೇಕೆ ಹೀಗಾಗುತ್ತಿದೆ ಎಂದು ವಿಚಾರ ಮಾಡಲು ಒಂದು ಕ್ಷಣವನ್ನು ವ್ಯಯಿಸಲೂ ಪುರುಸೊತ್ತಿಲ್ಲ. ಅಷ್ಟು ಕೆಲಸಗಳ ನಡುವೆ ಸಿಕ್ಕಿ ಹಾಕಿಕೊಂಡಿದ್ದೇವೆಯೇ? ಛೇ! ಇಲ್ಲವೇ ಇಲ್ಲ ರಾತ್ರಿ ಮಲಗುವ ಮುನ್ನ ಉಪಯುಕ್ತ ಕೆಲಸಗಳ ಪಟ್ಟಿ ಮಾಡಿದರೆ ದಿನಕ್ಕೊಂದೆರಡು ಮಾಡಿದ್ದರೆ ಅದು ಜಾಸ್ತಿನೇ ಅಂದುಕೊಂಡು ನಮಗೆ ನಾವೇ ಬೆನ್ನು ಚಪ್ಪರಿಸಿಕೊಳ್ಳಬೇಕು. ಆ ರೀತಿ ಕೆಲಸದ ಪ್ರೀತಿ. ಕೆಲಸದ ಪ್ರೀತಿ ಕಡಿಮೆ ಇದೆ ಅಂತೇನಿಲ್ಲ. ಮಾಡುವ ಕೆಲಸಗಳಿಗೆ ಅಡೆ ತಡೆ ಬಹಳ ಆಗುತ್ತಿವೆ ಅನ್ನೋದು ಕುಳಿತು ವಿಚಾರ ಮಾಡಿದಾಗ ತಿಳಿಯೋ ವಿಷಯ.’ ಮನೆ ಕಟ್ಟೋಕೆ ಯೋಜನೆ;  ಹಾಗಿದ್ರೆ ದಿನದ ಬಹು ಸಮಯ ಅನುಪಯುಕ್ತ ಕೆಲಸಗಳಲ್ಲಿ ಜಾರಿ ಹೋಗುತ್ತಿದೆ ಅಂದಂಗಾಯ್ತು ಅಲ್ಲವೇ? ಯಾವ ಸಂಪತ್ತು ಕೊಟ್ಟರೂ ಮರಳಿ ಸಿಗದ ಅಮೂಲ್ಯ ಸಮಯ ಸಂಪತ್ತನ್ನು ಕಳೆದುಕೊಳ್ಳುವುದು ಮನಸ್ಸಿಗೆ ತಿಳಿಯುತ್ತಿದ್ದರೂ ಅದಕ್ಕೆ ಏನೂ ಕ್ರಮಗಳನ್ನು ತೆಗೆದುಕೊಳ್ಳದೇ ಅಸಹಾಯಕರಂತೆ ಕೈ ಕಟ್ಟಿ ಕುಳಿತಿರಲು ಕಾರಣವೇನು? ಎಂಬ ಪ್ರಶ್ನೆ ನಮ್ಮ ಮುಖಕ್ಕೆ ಮುಖ ಕೊಟ್ಟು ನಿಂತರೆ ನಿರುತ್ತರರಾಗುತ್ತೇವೆ. ಕೆಲವು ಬಾರಿ ಯೋಜನೆ ಹಾಕಿಕೊಂಡರೆ ಸರಿ ಹೋಗಬಹುದು ಎನ್ನುವ ಯೋಚನೆಯೂ ಹೊಳೆಯುತ್ತದೆ. ಆದರೆ ಮನೆ ಕಟ್ಟೋಕೆ ದೊಡ್ಡ ದೊಡ್ಡ ಭವನಗಳನ್ನು ಮತ್ತು ಆಣೆಕಟ್ಟು ಕಟ್ಟೋಕೆ ಮಾತ್ರ ಯೋಜನೆ ಬೇಕು ಎನ್ನುವುದು ಬಹಳಷ್ಟು ಜನರ ತಲೆಯಲ್ಲಿ ಬೇರೂರಿದ ನಂಬಿಕೆ. ಹೀಗಾಗಿ ಯೋಜನೆ ಇಲ್ಲದ ಬದುಕು ಮರಳುಗಾಡಿನ ಮರಳಿನಂತೆ ಬಿದ್ದಲ್ಲೇ ಬಿದ್ದು ಹೋಗುತ್ತದೆ. ಆರಕ್ಕೇರುವುದಿಲ್ಲ ಮೂರಕ್ಕಿಳಿಯುವುದಿಲ್ಲ. ಯೋಜನೆಗಳಿಲ್ಲದ ಬದುಕು ಗಾಳಿಗಿಟ್ಟ ದೀಪದಂತೆ ಅಲ್ಲಾಡುತ್ತಲೇ ಇರುತ್ತದೆ. ಬದುಕಿಗೆ ಭದ್ರ ಬುನಾದಿ ಹಾಕುವುದೇ ಯೋಜನೆ. ಹಾಗಾದರೆ  ಅಚ್ಚು ಕಟ್ಟಾದ ಕಾರ್ಯ ನಿರ್ವಹಣೆಗೆ, ಗೆಲುವಿಗೆ ಯೋಜನೆ ಅದೆಷ್ಟು ಮುಖ್ಯ ಅದನ್ನು ಅನುಷ್ಠಾನಕ್ಕೆ ತರುವುದು ಹೇಗೆ ಎಂಬುದನ್ನು ತಿಳಿಯಬೇಕೆ? ಹಾಗಿದ್ದರೆ ಮುಂದಕ್ಕೆ ಓದಿ. ಯೋಜನೆ ಎಂದರೆ. . . .? ಯೋಜನೆಯ ಅಂತರ್ಗತ ಪ್ರಯೋಜನೆಗಳನ್ನು ಉತ್ತಮವಾಗಿ ವಿವರಿಸುವ ಹಳೆಯ ಮಾತೊಂದಿದೆ. ಅದು ‘ನೀವು ಯೋಜಿಸಲು ವಿಫಲರಾದರೆ, ನೀವು ವಿಫಲರಾಗಲು ಯೋಜಿಸುತ್ತೀರಿ.’ ಎಷ್ಟು ಮಾರ್ಮಿಕ ನುಡಿಯಲ್ಲವೇ? ಬದುಕಿನ ಚಂಡಮಾರುತಗಳಿಂದ ಪ್ರವಾಹಗಳಿಂದ ರಕ್ಷಿಸಲು ಯೋಜನೆಯೊಂದು ವಿಮೆಯಿದ್ದಂತೆ. ಭದ್ರತಾ ವ್ಯವಸ್ಥೆ ಸ್ಥಾಪಿಸಿದಂತೆ. ನಿತ್ಯದ ಜೀವನ ಮನಸೋ ಇಚ್ಛೆ ಬಾಲಂಗೋಚಿಯಿಲ್ಲದ ಗಾಳಿ ಪಟದಂತೆ ಹಾರಾಡುತ್ತಿದ್ದರೆ ಭವಿಷ್ಯವು ಸುರಕ್ಷಿತವಾಗಿರಲಾರದು ಎಂದು ಹೇಳಲು ಬ್ರಹ್ಮವಿದ್ಯೆ ಏನೂ ಬೇಕಿಲ್ಲ. ಆದರೆ ಯೋಜಿಸುವುದನ್ನು ಪರಿಗಣಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುವವರ ಮತ್ತು ಉಪೇಕ್ಷಿಸುವವರ ಸಾಲೇ ದೊಡ್ಡದಾಗಿದೆ. ಇದು ಸಮಯ ತೆಗೆದು ಕೊಳ್ಳುವ ಪ್ರಕ್ರಿಯೆಯಂತೆ ತೋರುತ್ತದೆಯಾದರೂ ಅನುಕ್ರಮ ಯೋಜನೆ ಬದುಕಿಗೆ ಪ್ರಯೋಜನಕಾರಿಯಂತೂ ಸತ್ಯ ಎಂಬುದು ಈಗಾಗಲೇ ಸಾಬೀತಾದ ಸಂಗತಿ. ಇರಲಿ ಕೆಲಸದ ಪಟ್ಟಿ ಮಾಡುವ ಕೆಲಸದ ಪಟ್ಟಿಯನ್ನು ಯೋಜಿಸಿಕೊಂಡು ಕೆಲಸ ಮಾಡಲು ನಿರ್ಧರಿಸಿದರೆ ಎಲ್ಲ ಕೆಲಸವೂ ಹೂವಿನಷ್ಟು ಹಗುರವೆನಿಸುತ್ತವೆ. ಮತ್ತೆ ಹೊಸ ಕೆಲಸಗಳಿಗೂ ಕೈ ಹಾಕುವಷ್ಟು ಸಮಯ ಕೈಯಲ್ಲಿ ಉಳಿಯುತ್ತದೆ. ವರ್ಕಟೈಂ ಎನ್ನುವ ಟ್ರ್ಯಾಕಿಂಗ್ ಸಾಫ್ಟವೇರ್ ನೀವು ಮಾಡುವ ಕೆಲಸಗಳಿಗೆ ಸರಿಯಾದ ಸಮಯವನ್ನು ನಿಗದಿಗೊಳಿಸಿ ಹೇಳುತ್ತದೆ. ಕೆಲಸ ಮುಗಿದ ನಂತರ ನೀವು ನಿಗದಿತ ಸಮಯದಲ್ಲಿ ಮುಗಿಸಿದ್ದಿರೋ ಅಥವಾ ತುಂಬಾ ಹೆಚ್ಚು ಸಮಯ ತೆಗೆದುಕೊಂಡಿದ್ದಿರೋ ಎನ್ನುವುದನ್ನು ವಿಶ್ಲೇಸಿಸುತ್ತದೆ.  ಇದು ಕಾರ್ಯ ಉತ್ಪಾದಕತೆ ಮತ್ತು ಆರೋಗ್ಯಕ್ಕೂ ಸಹಕಾರಿ. ನಿಮ್ಮ ಸಂಪೂರ್ಣ ಕಾರ್ಯ ಪ್ರಕ್ರಿಯೆಯನ್ನು ನೀವು ಕಾರ್ಯ ಮಾಡುವ ವಿಧಾನಕ್ಕೆ  ಅದು ಕನ್ನಡಿ ಹಿಡಿಯುತ್ತದೆ. ಇರಲಿ ಆದ್ಯತೆಯ ಪಟ್ಟಿ: ತಲುಪಬೇಕಾದ ಗುರಿಯ ಯೋಜನೆಯು ನಿತ್ಯ ಸ್ವಲ್ಪ ಸ್ವಲ್ಪ ತುಂಡರಿಸಿ ನಿರ್ವಹಿಸುತ್ತ ಹೋದರೆ ಒಂದು ದಿನ ಗಮ್ಯವನ್ನು ತಲುಪಲು ಸಾಧ್ಯ. ಮಾಡಬೇಕಾದ ಕೆಲಸಗಳನ್ನು ಆದ್ಯತೆಯ ಮೇಲೆ ಪಟ್ಟಿ ಮಾಡಿ.ಆಗ ನಿಮ್ಮ ಗಮನವನ್ನು ಕೇಂದ್ರೀಕರಿಸಲು ಸಾಧ್ಯವಷ್ಟೇ ಅಲ್ಲ ಎಲ್ಲವನ್ನೂ ನೆನಪಿಡುವ ಅವಶ್ಯಕತೆ ಇಲ್ಲ. ಏನೇನೋ ನೆನಪು ಮರೆತಿದಿನೇನೋ ಎಂಬ ಚಿಂತೆಯೂ ಇಲ್ಲ. ಸಣ್ಣ ಸಣ್ಣ ಮಾಹಿತಿಗಳ ಬಗೆಗೆ ತಲೆ ಕೆಡಿಸಿಕೊಳ್ಳುವ ಗೋಜಲು ಇಲ್ಲ. ತತ್ಪರಿಣಾಮ ನಿಮ್ಮ ಮೆದುಳು ಶಕ್ತಿಯುತವಾಗುತ್ತದೆ. ನಿರ್ದಿಷ್ಟ ಕಾರ್ಯದ ಮೇಲೆ ಮನಸ್ಸನ್ನು ಕೇಂದ್ರೀಕರಿಸಲು ಸಾಧ್ಯವಾಗುತ್ತದೆ. ಕ್ಯಾಲೆಂಡರ್ ನಿಂದ ಮೂರ್ಖರಾಗುವುದು ಬೇಡ. ವರ್ಷದಲ್ಲಿ ನೀವು ಎಷ್ಟು ದಿನ ಉಪಯೋಗಿಸಿಕೊಳ್ಳುತ್ತಿರೋ ಅಷ್ಟು ದಿನಗಳಿರುತ್ತವೆ. ಒಬ್ಬ ಒಂದು ವರ್ಷದಲ್ಲಿ ಒಂದು ವಾರದ ಮೌಲ್ಯ ಮಾತ್ರ ಗಳಿಸಿದರೆ ಮತ್ತೊಬ್ಬ ಒಂದು ವಾರದಲ್ಲಿ ಒಂದು ವರ್ಷದ ಮೌಲ್ಯ ಪಡೆಯಬಹುದು. ಅದು ಹೇಗೆ ಎಂಬ ಅಚ್ಚರಿಯ ಪ್ರಶ್ನೆಗೆ ಉತ್ತರ ಕೆಲಸದ ಮೇಲೆ ಗಮನ ಕೇಂದ್ರೀಕರಿಸುವುದು. ಗಮನ ಹೆಚ್ಚಿದಷ್ಟು ನೋಡ ನೋಡುತ್ತಿದ್ದಂತೆ ಉತ್ಪಾದಕತೆಯೂ ಹೆಚ್ಚುತ್ತದೆ. ‘ಉಚಿತವಾಗಿ ಬಂದಿದ್ದಕ್ಕೆ ಬೆಲೆ ಕಡಿಮೆ.’ ವಿಶೇಷವಾಗಿ ಸಲಹೆಗಳಿಗೆ ಉಪದೇಶದ ಮಾತುಗಳಿಗೆ ಇದು ಅನ್ವಯವಾಗುತ್ತದೆ. ಯೋಜನೆಯ ವಿಷಯದಲ್ಲಿ ನುರಿತವರು ಹೇಳಿದ್ದನ್ನು ಆಲಿಸಿ ನಿರ್ವಹಿಸಿದರೆ ಉತ್ಪಾದಕತೆ ಹೆಚ್ಚುವುದು ಖಚಿತ.   ಸ್ಪಷ್ಟತೆಯ ಸೆಲೆ  ಈಗಾಗಲೇ ಹೇಳಿದಂತೆ ಯೋಜನಾ ಪಟ್ಟಿಯು ಯಾವ ಕೆಲಸ ಎಷ್ಟು ಸಮಯ ಆದ್ಯತೆಯ ಬಗೆ ಹೇಗೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರವನ್ನು ಒದಗಿಸುತ್ತದೆ.ಬೇರೆ ಪದಗಳಲ್ಲಿ ಹೇಳುವುದಾದರೆ ಆದ್ಯತೆಯ ಪಟ್ಟಿ ನಿಮ್ಮ ಕೆಲಸಗಳಿಗೆ ಸೂಕ್ತ ದಿಕ್ಕಿನಲ್ಲಿ ಚಲಿಸಲು ಸಹಾಯ ಮಾಡುತ್ತವೆ.ನೀವು ಸಾಧಿಸಲೇಬೇಕಾದ ಉದ್ದೇಶಗಳನ್ನು ನಿರ್ದಿಷ್ಟ ಸಮಯದಲ್ಲಿ ಸಾಧಿಸಲು ಪ್ರೇರಕವಾಗುತ್ತದೆ. ಸ್ಪಷ್ಟತೆಯ ಸೆಲೆ ಇರುವಾಗ ಗೊಂದಲದ ಗೂಡಿನ ಗೊಡವೆಯೇ ಇಲ್ಲದಂತಾಗುತ್ತದೆ. ಸ್ಪೂರ್ತಿಯ ಹಾದಿಯ ಮೇಲೆ ನಡೆಯಲು ಸಾಧ್ಯವಾಗುವುದು.   ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತೆ ದಿನ ನಿತ್ಯದ ಕಾರ್ಯಾಚರಣೆಗಳಲ್ಲಿ ತುಂಬಾ ಕಾರ್ಯನಿರತರಾಗಿ ಅನುಕ್ರಮ ಯೋಜನೆಯನ್ನು ಆದ್ಯತೆಯನ್ನಾಗಿ ಮಾಡಲು ವಿಫಲರಾಗುವ ಸಾಧ್ಯತೆಯೇ ಹೆಚ್ಚು ಆದ್ದರಿಂದ ಅದರಿಂದ ಹೊರ ಬರುವುದು ಮುಖ್ಯ. ಯೋಜನೆಯಿಲ್ಲದೇ ಕಾರ್ಯ ನಿರ್ವಹಿಸುವ ಬಗೆ ಯಾವುದೇ ಸನ್ನಿವೇಶಗಳನ್ನು ಅನನ್ಯವಾಗಿ ದುರ್ಬಲಗೊಳಿಸಬಹುದು. ಕೌಶಲ್ಯಗಳನ್ನು ಅದೆಷ್ಟೇ ಕರತಲಾಮಲಕ ಮಾಡಿಕೊಂಡಿದ್ದರೂ ನಿರ್ಣಾಯಕ ಯೋಜನೆ ಇರದಿದ್ದರೆ ಸಿದ್ಧಿಸಿಕೊಂಡ ಕಲೆಗಳೆಲ್ಲ ನೀರಲ್ಲಿ ಹುಣಸೆಹಣ್ಣು ತೊಳೆದಂತೆ ವ್ಯರ್ಥ ಎಂಬುದನ್ನು ಗಮನದಲ್ಲಿಟ್ಟು  ಯೋಜನೆಗೆ ಮುಂದಾಗಿ. ಅರಿಯದೆ, ನೋಡದೆ, ಯೋಚಿಸದೆ, ಕಾರ್ಯ ಮಾಡಬಾರದು ಎಂದಿದ್ದಾನೆ ವಿಶ್ಣು ಶರ್ಮ. ವಿಶ್ರಾಂತಿಯ ನೆಲೆ ಗಡಿಬಿಡಿ ಜೀವನದಲ್ಲಿ ಸಮಯ ವೇಗದ ರೇಸ್ ಕುದುರೆಯಂತೆ ಓಡುತ್ತಿದೆ ಎನಿಸುತ್ತದೆ. ಅದರ ಪರಿವೆಯಿಲ್ಲದೇ ನಾವು ಕುರುಡರಂತೆ ಸಿಕ್ಕ ಸಿಕ್ಕಲ್ಲಿ ಸಮಯ ವ್ಯಯ ಮಾಡಿ ಯೋಜನೆಯಿಲ್ಲದೇ ಕಳಪೆ ಸಮಯ ನಿರ್ವಹಣೆ ಮಾಡಿ ಬಿಡುತ್ತೇವೆ. ಸಮಸ್ಯೆಗಳನ್ನು ನಾವೇ ಕೈ ಬೀಸಿ ಕರೆಯುತ್ತೇವೆ. ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡಲು ಓಡಾಡುತ್ತೇವೆ. ಅದು ನಿಷ್ಪ್ರಯೋಜಕವಾಗುವುದು. ಸರಿಯಾದ ಕೆಲಸದ ಯೋಜನೆಯು ಜೀವನದ ಗತಿಯನ್ನೇ ಬದಲಿಸಬಲ್ಲುದು ಎಂಬುದು ಸಂಶೋಧನೆಗಳು ಹೊರಗೆಡುಹಿದ ಸಂಗತಿ. ನಿದ್ರಾವಸ್ಥೆಯಲ್ಲಿರುವ ಕೆಲಸಗಳನ್ನು ಎಬ್ಬಿಸಬಹುದು. ಕೆಸರು ಗದ್ದೆಯ ಹುಳು ಹುಪ್ಪಡಿಯಂತಾಗಿರುವ ಎಲ್ಲ ಕೆಲಸಗಳನ್ನು ಉಪಯುಕ್ತ ಯೋಜನೆಯ ಮೂಲಕ ಮುಗಿಸಬಹುದು.ಅದು ನಿಮ್ಮ ಒತ್ತಡದ ಮಟ್ಟವನ್ನು ಪೂರ್ಣ ಕೆಳಕ್ಕಿಳಿಸುತ್ತದೆ.ಅಷ್ಟೇ ಅಲ್ಲ ವಿಶ್ರಾಂತಿಯ ನೆಲೆಗೂ ಭೇಟಿ ನೀಡಲು ಅವಕಾಶ ಲಭಿಸುವುದು.ನಿಮಗೆ ನೀವು ಯೋಜನೆಯ ಸೂಕ್ಷ್ಮದರ್ಶಕದ ಕೆಳಗೆ ಇರಿಸಿಕೊಳ್ಳಲು ಹೆದರಬೇಡಿ. ಗೆಲುವು ಯೋಜನೆಯಿಲ್ಲದೇ ಬರಲಾರದು ಬಂದರೂ ಬಹು ದಿನ ನಿಲ್ಲಲಾರದು. ಗೆಲುವು ಮತ್ತು ಯೋಜನೆ ಅಭೇದ್ಯವಾಗಿ ಬೆಸೆದುಕೊಂಡಿವೆ. ದೊಡ್ಡ ಗೆಲುವನ್ನು ನಿರೀಕ್ಷಿಸಿ ಯೋಜನೆಯಿಂದ ಮುಂದಡಿ ಇಡಿ. ಈ ಬೆಸುಗೆಯ ಮುಗುಳ್ನಗು ತಮ್ಮ ಮುಖದ ಮೇಲೆ ಮೂಡಲಿ. ********

ದಿಕ್ಸೂಚಿ Read Post »

ಅಂಕಣ ಸಂಗಾತಿ, ಜೀವನ

ದಿಕ್ಸೂಚಿ

ಆಲಸ್ಯತನ ಓಡಿಸಿ ಅಚ್ಚರಿಗಳ ಸಾಧಿಸಿ. ಜಯಶ್ರೀ ಜೆ.ಅಬ್ಬಿಗೇರಿ ಕಳ್ಳತನ ಮಾಡಿ ಸಿಕ್ಕಿ ಬಿದ್ದ ವ್ಯಕ್ತಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ‘ನಿನ್ನ ಪರವಾಗಿ ಹೇಳುವುದೇನಾದರೂ ಇದ್ದರೆ ಹೇಳಬಹುದು ಎಂದು ಹೇಳಿದಾಗ ಅದಕ್ಕೆ ಆತ “ನ್ಯಾಯಾಧೀಶರೇ, ನನ್ನ ಜೊತೆಗೆ ನನ್ನ ತಂದೆ ತಾಯಿಗೂ ಶಿಕ್ಷೆ ವಿಧಿಸಿ. ಅವರನ್ನೂ ಜೈಲಿಗೆ ಕಳಿಸಿ” ಎಂದ. ನ್ಯಾಯಾಧೀಶರು ಕಾರಣ ಕೇಳಿದಾಗ ಕಳ್ಳ ಹೇಳಿದ “ನಾನು ಚಿಕ್ಕವನಿದ್ದಾಗ ಶಾಲೆಯಲ್ಲಿ ಒಂದು ಪೆನ್ಸಿಲ್ ಕದ್ದೆ. ನಮ್ಮ ತಂದೆ ತಾಯಿಗೆ ಗೊತ್ತಾದರೂ ಅವರು ಏನನ್ನೂ ಹೇಳಲಿಲ್ಲ. ನಂತರ ಬೇರೆ ಬೇರೆ ವಸ್ತುಗಳನ್ನು ಕದ್ದು ತರತೊಡಗಿದೆ. ಕಳ್ಳತನದ ವಿಷಯ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಏನೂ ಹೇಳುತ್ತಿರಲಿಲ್ಲ. ನನ್ನ ಕುಕೃತ್ಯವನ್ನು ಅವರು ನಿರ್ಲಕ್ಷಿಸಿದರು. ಬರಬರುತ್ತ ನನಗೆ ಕಳ್ಳತನ ಚಟವಾಯಿತು. ಇಂದು ನಾನು ದೊಡ್ಡ ಪ್ರಮಾಣದ ಕಳ್ಳನಾಗಲು ಅವರೇ ಕಾರಣ. ಹೀಗಾಗಿ ನನ್ನೊಂದಿಗೆ ಅವರನ್ನೂ ಶಿಕ್ಷಿಸಿ.” ಎಂದುತ್ತರಿಸಿದ. ಕಳ್ಳ ಹೇಳಿದ್ದು ಸರಿಯಾಗಿದೆ. ಪಾಲಕರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸದೇ ಇದ್ದುದರಿಂದ ಅಪರಾಧದಲ್ಲಿ ಪಾಲುದಾರರಾದರು. ಈ ದೃಷ್ಟಾಂತವು ಯಾವುದೇ ಕೆಟ್ಟದ್ದನ್ನು ಸಸಿಯಾಗಿದ್ದಾಗ ಚಿವುಟದಿದ್ದರೆ ಹೆಮ್ಮರವಾಗಿ ಬೆಳೆದು ಬಾಳು ಹಾಳು ಮಾಡುತ್ತದೆ ಎಂಬುದಕ್ಕೆ ನಿದರ್ಶನ.. ಸೋಮಾರಿತನವನ್ನು ಸ್ವಲ್ಪದರಲ್ಲಿದ್ದಾಗಲೇ ಚಿವುಟಬೇಕು ಇಲ್ಲದಿದ್ದರೆ ಜೀವನವನ್ನೇ ನಾಶಮಾಡುತ್ತದೆ. ಆಲಸ್ಯತನಕ್ಕೆ ಮೈಗಳ್ಳತನವೆಂಬ ಶಬ್ದವೂ ಚಾಲ್ತಿಯಲ್ಲಿದೆ. ಆಲಸ್ಯತನವೂ ಒಂದು ರೀತಿಯ ಕಳ್ಳತನವೇ. ಮೈಗಳ್ಳತನ ಮಾಡಿದರೆ ಭವಿಷ್ಯ ಮಣ್ಣು ಪಾಲಾದಂತೆಯೇ ಸರಿ. ‘ನಾನು ಆಲಸಿ’ ಎಂದುಕೊಳ್ಳದೇ ಚಟುವಟಿಕೆಯಿಂದಿರುವುದು ನಮ್ಮ ಕೈಯಲ್ಲೇ ಇದೆ. ಆಲಸ್ಯತನವೆಂದರೆ? ಆಲಸ್ಯತನವೆಂಬುದು ಏನೂ ಮಾಡದೇ ಇರುವ ಮನಸ್ಥಿತಿ. ನಮ್ಮನ್ನು ಕೆಳಗೆ ನೂಕುವ ವೈರಿ. ‘ಹತ್ತಕ್ಕೆ ಒಂಭತ್ತು ಪಾಲಿನ ದೂಃಖಕ್ಕೆ ಕಾರಣ ಸೋಮಾರಿತನ.’ ಎಂಬುದು ಕರ‍್ಲೈಲ್ ಅಭಿಮತ. ‘ಹೂವನ್ನು ಒಡನೆಯೇ ಕಿತ್ತು ಸ್ವೀಕರಿಸು.. ಇಲ್ಲದಿದ್ದರೆ ಅದು ಬಾಡಿ ಹೋಗುವುದು.’ ಇದು ಕವಿ ಟ್ಯಾಗೋರ ಮಾತು.. ಎಲ್ಲದಕ್ಕೂ ನಿರಾಸಕ್ತಿಯನ್ನು ತೋರುವ ಸ್ಥಿತಿ. ಸವಾಲೆನಿಸುವ ಕಾರ‍್ಯ ಮಾಡಬೇಕಾದಾಗ ಇಲ್ಲವೇ ಬೋರೆನಿಸಿದಾಗ, ಕೆಲಸದ ಹೊರೆ ಹೆಚ್ಚಾದಾಗಲೂ ಈ ಸ್ಥಿತಿ ಉಂಟಾಗಬಹುದು. ಆಲಸ್ಯತನವೊಂದು ಲಕ್ಷಣವೇ ಹೊರತು ಸಮಸ್ಯೆ ಅಲ್ಲ ಎಂಬುದನ್ನು ಸರಿಯಾಗಿ ನೆನಪಿನಲ್ಲಿಡಿ. ಪ್ರೇರಣೆಯ ಕೊರತೆ, ಭಯ, ದಣಿವು ಕಂಫರ್ಟ್ ಸ್ಥಿತಿಯಲ್ಲಿ ಇರಲು ಇಚ್ಛಿಸುವುದು. ಸಹ ಆಲಸ್ಯತನಕ್ಕೆ ಕಾರಣವಾಗುತ್ತವೆ. ಇದೊಂದು ಜೀವ ಕಳೆಯನ್ನು ಕಳೆದುಕೊಂಡಿರುವ ಸ್ಥಿತಿ. ದೈನಂದಿನ ಚಟುವಟಿಕೆಗಳಲ್ಲೂ ಉಲ್ಲಾಸ ಕಳೆದುಕೊಳ್ಳಬಹುದು.. ಮನಸ್ಸಿನ ಮೇಲೆ ಹಿಡಿತ ಸಾಧಿಸಿದರೆ ಇದರಿಂದ ಹೊರ ಬರುವುದು ಸುಲಭ. ಆಪಾದಿಸಿದ ಸಂಗತಿ ನಿಜ ಮಾಡಬೇಡಿ ‘‘ಮೂರು ವರ್ಷದ ಬುದ್ಧಿ ನೂರು ವರ್ಷದವರೆಗೆ’ ಎಂಬ ಗಾದೆ ಮಾತಿದೆ. ಹೀಗಾಗಿ ನಾವು ಚಟುವಟಿಕೆಯುಳ್ಳವರಾಗಿ ಸದಾ ಕ್ರಿಯಾಶೀಲರಾಗಿ ಸೃಜನಶೀಲರಾಗಿ ಇರಬೇಕೆಂದರೆ ಚಿಕ್ಕವರಿದ್ದಾಗಿನಿಂದಲೇ ಚುರುಕುತನದಿಂದ ಪಾದರಸದಂತೆ ಕೆಲಸ ಕಾರ‍್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಬಗ್ಗೆ ನಮಗಿರುವ ದುರಭಿಪ್ರಾಯಗಳಲ್ಲಿ ಹೆಚ್ಚು ನಮ್ಮ ಮೇಲೆ ಇತರರು ಅಪಾದಿಸಿದ ಸಂಗತಿಗಳೇ ಇರುತ್ತವೆ. ಅವುಗಳನ್ನು ಒಪ್ಪಿಕೊಂಡು ನಿಜ ಮಾಡಬೇಡಿ.”ನೀನು ತುಂಬಾ ಆಲಸಿ. ನಿನ್ನಿಂದ ಕೆಲಸ ಸಾಧ್ಯವಿಲ್ಲ” ಎಂದು ಅವರೆಂದರೆ “ಇಲ್ಲ, ಅದು ನಿಜವಲ್ಲ. ನನಗೆ ಬೇಕೆನಿಸಿದ್ದನ್ನು ಚೆನ್ನಾಗಿ ಉತ್ಸಾಹದಿಂದ ಮಾಡಬಲ್ಲೆ.’ ಎಂದು ಮಾಡಿ ತೋರಿಸಿ. ‘ಮನುಷ್ಯ ತನ್ನ ಕುರಿತು ತಾನೇನು ಅಂದುಕೊಳ್ಳುತ್ತಾನೋ ಅದೇ ಆತನ ಅದೃಷ್ಟವನ್ನು ನಿರ್ಣ ಯಿಸುತ್ತದೆ..’ ಎಂದಿದ್ದಾನೆ ಎಚ್ ಡಿ ಥೋರೇ. ‘ಯಾವಾಗಲೂ ಬಾತುಕೋಳಿಯಂತೆ ನಡೆದುಕೊಳ್ಳಿ–ಮೇಲ್ಮಟ್ಟದಲ್ಲಿ ಶಾಂತವಾಗಿರಿ ಮತ್ತು ತಳ ಮಟ್ಟದಲ್ಲಿ ಜೋರಾಗಿ ಹುಟ್ಟು ಹಾಕಿ..’. ಕಾರಣದ ಮೇಲೆ ಬೆಳಕು ಚೆಲ್ಲಿ ಆಲಸ್ಯತನದ ಮೂಲ ಕಾರಣವೇನೆಂದು ಯೋಚಿಸಿ ಅದರ ಮೇಲೆ ಬೆಳಕು ಚೆಲ್ಲಿ. ದಣಿವಾಗಿದ್ದರೆ ಕೆಲ ಹೊತ್ತು ವಿಶ್ರಮಿಸಿಕೊಳ್ಳಿ. ವಿಶ್ರಾಂತಿಯಿಂದ ದಣಿವಾಗುವಷ್ಟು ವಿಶ್ರಾಂತಿ ತೆಗೆದುಕೊಳ್ಳದಿರಿ. ಕಾರ್ಯದ ಹೊರೆ ಹೆಚ್ಚಾಗಿದ್ದರಿಂದ ಮೈಗಳ್ಳತನ ಉಂಟಾಗಿದ್ದರೆ ಭಾರವೆನಿಸುವ ಕೆಲಸವನ್ನು ಸರಳೀಕರಿಸಿ, ತುಂಡು ತುಂಡಾದ ಭಾಗಗಳಲ್ಲಿ ಹೇಗೆ ಮಾಡುವುದು ಯೋಜಿಸಿ ಕಾರ‍್ಯಕ್ಕಿಳಿಯಿರಿ. ಮಾಡುತ್ತಿರುವ ಕೆಲಸದ ಬಗ್ಗೆ ಭಯವೇ? ‘ಮಾಡುವ ಕೆಲಸದ ಮೇಲೆ ಗಾಢಾಸಕ್ತಿ ಇರುವ ವ್ಯಕ್ತಿಗೆ ಜೀವನದಲ್ಲಿ ಭಯವಾಗಿಸುವ ಅಂಶ ಯಾವುದೂ ಇಲ್ಲ.’ ಎಂದಿದ್ದಾನೆ ಸ್ಯಾಮ್ಯುವೆಲ್ ಗೋಲ್ಡ್ವಿನ್. ನಿಮ್ಮ ಪ್ರತಿಭೆ ಸಾಮರ್ಥ್ಯದ ಬಗ್ಗೆ ನಂಬಿಕೆ ಬೆಳೆಸಿಕೊಂಡರೆ ಭಯ ಮಂಗಮಾಯ. ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ಕಾಲ ಹರಣ ಮಾಡುತ್ತಿದ್ದರೆ ಮೊಬೈಲಿನಿಂದ ದೂರವಿರಿ.ದಿನಚರಿ ಬದಲಿಸಿ.ಸಂಗೀತ ಆಹಾರ ಹಾಸ್ಯ ಪ್ರಜ್ಞೆಯಿಂದ ದಿನಚರಿಯನ್ನು ಬದಲಿಸಿ. ಕೆಲವು ವಿಷಯಗಳು ಆಗಬೇಕೆಂದು ನೀವು ನಿರೀಕ್ಷಿಸಿದಾಗ ವಿಚಿತ್ರವಾಗಿ ಹಾಗೇ ಆಗುತ್ತವೆ.’ ಒಂದು ದೊಡ್ಡ ವಿಚಾರವು ನಮ್ಮ ಬದುಕನ್ನು ಮತ್ತು ಸುತ್ತಲಿನ ವಿಶ್ವವನ್ನೇ ಬದಲಿಸಬಹುದು. ಒಂದೇ ಒಂದು ಮೇಧಾವಿ ವಿಚಾರ ಇಡೀ ಪರಿಸ್ಥಿತಿಯನ್ನೇ ಬದಲಿಸಬಲ್ಲದು. ಚೆನ್ನಾಗಿ ಹೇಳುವುದಕ್ಕಿಂತ ಚೆನ್ನಾಗಿ ಮಾಡುವುದು ಉತ್ತಮ.. ಉತ್ಸಾಹ ಕೂಡಗೊಡುವುದಿಲ್ಲ ಆಲಸ್ಯತನ ಎಬ್ಬಿಸಿಗೊಡುವುದಿಲ್ಲ. ಹೀಗಾಗಿ ನಾವು ಪ್ರಯತ್ನ ಪಟ್ಟಾಗ ಮಾತ್ರ ಗೆಲ್ಲುತ್ತೇವೆ. ಹಾಗಂತ ಒಮ್ಮೆಲೇ ಎಲ್ಲ ಕೆಲಸಗಳನ್ನು ಮಾಡಲು ಹೋಗದಿರಿ. ‘ಅನೇಕ ಕೆಲಸಗಳನ್ನು ಮಾಡಲು ಅತಿ ಚಿಕ್ಕ ದಾರಿಯೆಂದರೆ ಒಂದು ಸಲಕ್ಕೆ ಒಂದು ಕೆಲಸ ಮಾತ್ರ ಮಾಡುವುದು.’ಭವಿಷ್ಯದ ಬಗ್ಗೆ ಆಲೋಚಿಸಿಇವತ್ತು ನಾನು ಆರಾಮವಾಗಿದ್ದೇನೆ ಎಂದು ಕಾಲಿನ ಮೇಲೆ ಕಾಲು ಹಾಕಿ ಸೋಮಾರಿತನ ತೋರಿದರೆ ಭವಿಷ್ಯತ್ತಿನಲ್ಲಿ ತೊಂದರೆ ಕಟ್ಟಿಟ್ಟ ಬುತ್ತಿ. ‘ಭವಿಷ್ಯತ್ ಬಗ್ಗೆ ಆಲೋಚಿಸುವವನೇ ಸರಿಯಾದ ದೃಷ್ಟಿಕೋನವಿರುವ ವ್ಯಕ್ತಿ.’ಎಂದು ಇನ್ಯೆನ್ ಹೇಳಿದ್ದಾನೆ. .’ಇಬ್ಬರು ವ್ಯಕ್ತಿಗಳು ಕಿಟಕಿಯ ಮೂಲಕ ನೋಡುತ್ತಾರೆ. ಒಬ್ಬನು ಮಣ್ಣನ್ನು ನೋಡುತ್ತಾನೆ. ಇನ್ನೊಬ್ಬನು ನಕ್ಷತ್ರಗಳನ್ನು ನೋಡುತ್ತಾನೆ.’ ನಾವು ನಮ್ಮ ಮನಸ್ಸಿನಲ್ಲಿ ಚಿತ್ರಿಸಿಕೊಂಡಿರುವುದರ ಕಡೆಗೆ ಚಲಿಸುತ್ತೇವೆ. ಇಂದು ನಿಮ್ಮಲ್ಲಿರುವ ಶಕ್ತಿ ಪ್ರತಿಭೆಗಳನ್ನು ಗುರಿಯೆಡೆಗೆ ಸರಿಯಾಗಿ ಅಳವಡಿಸಿ.ಇದು ಆಲಸ್ಯತನದಿಂದ ಮುಂದೂಡುವ ಕೆಟ್ಟ ಚಟವನ್ನು ಅದರಿಂದುಂಟಾಗುವ ಕೆಡುಕನ್ನು ನಿವಾರಿಸುತ್ತದೆ ಆಲಸಿಗಳು ಅವಕಾಶದ ಬದಲು ರಕ್ಷಣೆಯ ಕುರಿತಾಗಿ ಚಿಂತಿಸುತ್ತಾರೆ. ಸೋಮಾರಿಗಳಿಗೆ ಸಾವಿಗಿಂತ ಹೆಚ್ಚಾಗಿ ಜೀವನವೆಂದರೆ ಭಯ ಎನಿಸುತ್ತದೆ. ಮನಸ್ಸಿನ ಅಂಗವಿಕಲತೆಗೆ ಸೊಪ್ಪು ಹಾಕದಿರಿ ‘ಒಂದು ಹಾವನ್ನೋ ದುರ್ಜನರನ್ನೋ ಆರಿಸಿಕೊಳ್ಳಬೇಕಾದಾಗ ಹಾವನ್ನೇ ಆರಿಸಿಕೋ. ಹಾವು ಆತ್ಮ ರಕ್ಷಣೆಗಾಗಿ ಮಾತ್ರ ಕಚ್ಚುತ್ತದೆ. ದುರ್ಜನರು ನಿಷ್ಕಾರಣವಾಗಿ ಹೆಜ್ಜೆ ಹೆಜ್ಜೆಗೂ ಕಚ್ಚುತ್ತಾರೆ.’ ಎಂದಿದ್ದಾನೆ ಚಾಣಕ್ಯ. ಇದೇ ರೀತಿಯಲ್ಲಿ ಇತ್ತೀಚಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಸಮರ್ಥನನ್ನೋ ಆಲಸಿಯನ್ನೋ ಆರಿಸಿಕೊಳ್ಳಬೇಕಾದಾಗ ಅಸಮರ್ಥನನ್ನು ಆರಿಸಿಕೋ ಎನ್ನುತ್ತಾರೆ. ಏಕೆಂದರೆ ಅಸಮರ್ಥನಿಗೆ ತಿಳಿ ಹೇಳಿ ತರಬೇತಿ ನೀಡಿ ಕೆಲಸ ತೆಗೆಯಬಹದು. ಆದರೆ ಆಲಸಿ ತನ್ನೊಂದಿಗೆ. ಸಮರ್ಥರನ್ನೂ ಹಾಳು ಮಾಡುತ್ತಾನೆ ‘. ಶರೀರಕ್ಕೆ ಅಂಗವಿಕಲತೆ ಇದ್ದರೂ ಗೆದ್ದು ತೋರಿದ ಮಹನೀಯರು ಹಲವರು. ಅದರಲ್ಲಿ ಕುಂಟನಾದರೂ ಅಮೇರಿಕದಂಥ ದೇಶವನ್ನು ಅತ್ಯದ್ಭುತವಾಗಿ ಮುನ್ನಡೆಸಿದ ರೂಸ್ ವೆಲ್ಟ್ .ವಿವಿಧ ಅಂಗಗಳ ವಿಕಲತೆಯಿಂದ ಕಂಗೆಡದೇ ಗೆದ್ದು ತೋರಿದ ಹೆಲೆನ್ ಕೆಲ್ಲರ್. ಜಗತ್ತು ಕಂಡು ಬೆರಗಾದ ಸ್ಟೀಫನ್ ಹಾಕಿಂಗ್ ಹೀಗೆ ಪಟ್ಟಿ ಬೆಳೆಯುತ್ತದೆ. ಆಲಸ್ಯತನವೊಂದು ಮನಸ್ಸಿನ ಅಂಗವಿಕಲತೆ. ಇದರ ಬಲಿಗೆ ಬಿದ್ದರೆ ಮುಗಿದು ಹೋಯಿತು. ಎಂಥ ಮೇದಾವಿ, ಅಪ್ರತಿಮ ಪ್ರತಿಭಾವಂತನೂ ಹೇಳ ಹೆಸರಿಲ್ಲದಂತಾಗುವುದನ್ನು ಕಣ್ಣಾರೆ ಕಾಣುತ್ತೇವೆ. ನೀವು ನಿಮ್ಮ ಮನಸ್ಸಿನಿಂದ ಆಳಲಾಗುತ್ತಿದ್ದರೆ ಒಬ್ಬ ಅರಸ, ದೇಹದಿಂದಾದರೆ ಗುಲಾಮ. ತನ್ನನ್ನು ತಾನು ಗೆಲ್ಲುವ ಶಕ್ತಿ ಹೊಂದಿರುವವನನ್ನು ತಡೆಯುವಂಥದ್ದು ಯಾವುದೂ ಇಲ್ಲ. ಆಲಸ್ಯತನ ಓಡಿಸಿ ಅಚ್ಚರಿಗಳ ಸಾಧಿಸಿ.

ದಿಕ್ಸೂಚಿ Read Post »

ಅಂಕಣ ಸಂಗಾತಿ, ಜೀವನ

ದಿಕ್ಸೂಚಿ

ವಿಶಾಲ ಗೋಲದೊಳಗೆ ಎಂದೆಂದಿಗೂ ಅನಿಶ್ಚತತೆ ಜಯಶ್ರೀ ಜೆ.ಅಬ್ಬಿಗೇರಿ . ಅನಿಶ್ಚಿತತೆ ಎಂದ ಕೂಡಲೇ ನನಗೆ ನೆನಪಿಗೆ ಬರೋದು ತತ್ವಜ್ಞಾನಿಯೊಬ್ಬನ ಜೀವನದ ನೈಜ ಘಟನೆ.ಆತ ಪ್ರಸಿದ್ಧ ಪಾಶ್ಚಿಮಾತ್ಯ ತತ್ವಜ್ಞಾನಿ ನರ‍್ಮನ್ ಕಸಿನ್ಸ್.ಆತನ ದಿ ಅನಾಟಮಿ‌‌ ಆಫ್ ಇಲ್ನೆಸ್ ಎಂಬ ಗ್ರಂಥ ತುಂಬಾ ಪ್ರಸಿದ್ಧಿಯನ್ನು ಹೊಂದಿದೆ.ಇಂಥ ಸಾಧಕನಿಗೆ ರಕ್ತ ಕ್ಯಾನ್ಸರ್ ಎಂದು ಗೊತ್ತಾಯಿತು.ಇದನ್ನು ಕೇಳಿ ಆತನಿಗೆ ಬರಸಿಡಿಲು ಬಡಿದಂತಾಯಿತು.ಆದರೆ ಅವನು ತನ್ನ ಮನೋಭಾವನೆ ಯಿಂದ ಅದನ್ನು ಗುಣಪಡಿಸಿಕೊಳ್ಳಬೇಕೆಂದು ನಿರ್ಧರಿಸಿದ ಹಾಸ್ಯ ಚಲನಚಿತ್ರಗಳನ್ನು ನೋಡತೊಡಗಿದ.ಸುಮಾರು ೫೦೦ ಹಾಸ್ಯ ಚಲನಚಿತ್ರಗಳನ್ನು ನೋಡಿದ್ದರ ಪರಿಣಾಮ ಭಾರಿ ಆಗಿತ್ತು.ಆತ ರಕ್ತ ಕ್ಯಾನ್ಸರ್‌ನಿಂದ ಗುಣ ಮುಖ ಆಗು ವುದು ಅಷ್ಟೇ ಅಲ್ಲ.ಮುಂದೆ ಇಪ್ಪತ್ತು ವರ್ಷಗಳ ಕಾಲ ಸು ಖವಾಗಿ ಬದುಕಿದ.ನರ‍್ಮನ್‌ನ ಕಥೆ ಓದಿ ಅರೆ! ಅನಿಶ್ಚಿತತೆ ಯ ಮನೋಭಾವನೆಯಿಂದ ಇಷ್ಟು ಸಲೀಸಾಗಿ ಗೆಲ್ಲಬಹು ದೇ ಅಂತೆನಿಸಿತಲ್ಲವೇ? ಶತಾಯುಷಿಗಳಾಗಿ ಬದುಕಿದವರ ಜೀವನ ಚರಿತ್ರೆಯ ಅಧ್ಯಯನ ಮಾಡಿದವರು ಮತ್ತು ಸ ಮೀಕ್ಷೆಗಳು ಪ್ರಕಟಿಸಿದ ವರದಿ ‘ಸಂತೋಷದಾಯಕ ಮ ನೋಭಾವವೇ ಶತಾಯಿಷಿಗಳನ್ನು ಎಂಥ ಕಡುಕಷ್ಟ ಕಾಲ ದ ಪರಿಸ್ಥಿತಿಯಲ್ಲಿ ಮತ್ತು ಅನಿಶ್ಚಿತತೆಯಲ್ಲಿ ರಕ್ಷಿಸಿತು’ ಎಂದು ಹೇಳುತ್ತದೆ.ಅನಿಶ್ಚಿತತೆ ಜೀವನದ ಒಂದು ಭಾಗ ಎಲ್ಲವೂ ನಾವೆಂದಕೊಂಡಂತೆ ನಡೆದರೆ ಬದುಕು ನಮ್ಮ ನಿಯಂತ್ರಣದಲ್ಲಿದೆ ಅಂತ ಖುಷಿಯಾಗುತ್ತದೆ.ಯಾವುದೇ ಒಂದು ದಿನ ಹೀಗೆಲ್ಲ ಆಗುತ್ತೆ ಅಂತ ನಾವೆಲ್ಲ ನಿರೀಕ್ಷಿಸಿರು ವುದಿಲ್ಲ.ಅಷ್ಟೇ ಅಲ್ಲ ಆ ದಿಸೆಯಲ್ಲಿ ಎಳ್ಳಷ್ಟು ಯೋಚಿಸಿರು ವುದಿಲ್ಲ. ಅಂಥ ಸಂದರ್ಭದಲ್ಲಿ ಒಂದು ಅನಿಶ್ಚಿತತೆ ನಮಗೆ ಹೇಳದೇ ಕೇಳದೇ ಒಮ್ಮೆಲೇ ಧುತ್ ಎಂದು ಪ್ರತ್ಯಕ್ಷವಾಗಿ ಬಿಡುತ್ತದೆ.ಅದು ನೈಸರ್ಗಿಕ ವಿಕೋಪದ ದಿನಗಳಲ್ಲಿ ಆದ ರಂತೂ ಮುಗಿದೇ ಹೋಯಿತು. ಅಯ್ಯೋ! ಇದನ್ನು ಇನ್ನು ಹೇಗೆ ನಿಭಾಯಿಸಬೇಕೆಂದು ತಲೆಗೆ ಕೈ ಹಚ್ಚಿಕೊಂಡು ಅಸ ಹಾಯಕರಾಗಿ ಕೂತು ಬಿಡುತ್ತೇವೆ.ಕೆಲವರು ಇದು ಹೀಗೆ ಒಂದು ದಿನ ಆಗಬಹುದು ಅಂತ ಅಂದುಕೊಂಡಿದ್ದೆ ಅಂತ ಹೇಳುವುದನ್ನೂ ಕೇಳುತ್ತೇವೆ.ಅದು ಮೊದಲೇ ಗೊತ್ತಿದ್ದರೆ, ಏನಾದರೂ ಕ್ರಮ ಏಕೆ ತೆಗೆದುಕೊಳ್ಳಲಿಲ್ಲ ಎನ್ನುವ ಪ್ರಶ್ನೆ ನಮ್ಮ ಮುಖಕ್ಕೆ ಮುಖ ಮಾಡಿ ನಿಲ್ಲುತ್ತದೆ.ಅಂದರೆ ಅದೆಲ್ಲ ನಾವೆಷ್ಟು ಜಾಣರು ಅಂತ ತೋರಿಸಿಕೊಳ್ಳುವ ನಂಬ‌ಲಾಗ ದ ತಂತ್ರ ಅಷ್ಟೇ.ಕೆಲವೊಮ್ಮೆ ಬರೀ ಸಮಾಧಾನಕ್ಕೆ ಹಾಗೆ ಹೇಳಿಕೊಳ್ಳುತ್ತೇವೆ.ಅಂದ್ಹಾಗೆ ಅನಿಶ್ಚಿತತೆ ಜೀವನದ ಒಂದು ಭಾಗ.ಅನ್ನುವುದನ್ನು ನಾವು ಬಹಳಷ್ಟು ಸಲಮರೆತು ಬಿಡು  ತ್ತೇವೆ.ಹಾಗೆ ಕೂಲಂಕುಷವಾಗಿ ಗಮನಿಸಿದರೆ ಅನಿಶ್ಚಿತತೆ ಯ ಬಗ್ಗೆ ನಾವು ಆತಂಕ ಪಡಬೇಕಿಲ್ಲ.ಏಕೆಂದರೆ ‘ಅನಿಶ್ಚಿತ ತೆಯ ಸನ್ನಿವೇಶದಲ್ಲಿ ಸಾಧ್ಯತೆಗಳು ಮತ್ತು ಆಯ್ಕೆಗಳು ಹೆಚ್ಚಾಗಿರುತ್ತವೆ’ . ಬದಲಾವಣೆಯ ಆಗರ ಅನಿಶ್ಚಿತತೆ ಆವರಿಸಿದಾಗ ಎಷ್ಟೇ ಗಟ್ಟಿಗರಾಗಿದ್ದರೂ ಅರಿವಿಗೆ ಬರದೇ ಭಯ ಆವರಿಸಿಕೊ ಳ್ಳುತ್ತದೆ.ಉಳಿದ ಸಮಯದಲ್ಲಿ ಅತಿ ಚುರುಕಾಗಿ ಕೆಲಸ ಮಾಡುವ ಮೆದುಳು ಮಂಕಾಗಿ ಬಿಡುತ್ತದೆ.ಹಿಂಡನ್ನು ಅಗ ಲಿದ ಮರಿ ಆನೆಯಂತಾಗುತ್ತದೆ.ಬಿದ್ದರೂ ಮೀಸೆ ಮಣ್ಣಾಗಿ ಲ್ಲ ವೆಂದು ತೋರಿಸಿಕೊಳ್ಳುವ ಜಾಯಮಾನ.ಅಷ್ಟು ಸುಲ ಭ ವಾಗಿ ಒಪ್ಪಿಕೊಳ್ಳುವುದಿಲ್ಲ.ಇದೇನು ಮಹಾ ಅದೆಷ್ಟೋ ಕಷ್ಟಗಳ ಮೂಟೆಗಳನ್ನು ಎತ್ತಿ ಬಿಸಾಕಿದ್ದೀನಿ.ಇದು ಯಾವ ಲೆಕ್ಕ ಬಿಡಿ ಎನ್ನುವ ಅಹಂಕಾರದ ಮಾತುಗಳನ್ನೂ ಆಡು ತ್ತೇವೆ.ಆದರೆ ವಾಸ್ತವ ಬೇರೆಯೇ ಇರುತ್ತದೆ.ನಮ್ಮೆದುರು ದೊಡ್ಡದೊಂದು ಶೂನ್ಯ ನಗುತ್ತ ನಿಂತಿರುತ್ತದೆ.ಸಣ್ಣ ವಿಷ ಯಗಳು ಸಣ್ಣ ಮನಸ್ಸುಗಳಿಗೆ ಸಂತೋಷ ನೀಡುತ್ತವೆ. ಎನ್ನುತ್ತ ದೊಡ್ಡದರತ್ತ ಚಿತ್ತ ಹರಿಸಿದರೆ ಮುಂದೇನು ಅಂತ ದಿಕ್ಕೇ ತೋಚದ ಹಾಗೆ ಕೂತಲ್ಲೇ ಕಣ್ಣೀರು ಹರಿಯುತ್ತದೆ. ಕೆಲವೊಮ್ಮೆ ದೇವರ ಮನೆಗೆ ಓಡಿ ಹೋಗಿ ಕಾಪಾಡಪ್ಪಾ ಅಂತ ಗಲ್ಲ ಗಲ್ಲ ಬಡಿದುಕೊಳ್ಳುವುದೂ ಉಂಟು.ಹಾಗಾದ ರೆ ಈ ಅನಿಶ್ಚಿತತೆ ಸನ್ನಿವೇಶದಲ್ಲಿ ಏನೆಲ್ಲ ಮಾಡಬಹುದು? ಚಿನ್ನದಂಥ ಕನಸನ್ನು ಮತ್ತೆ ಮತ್ತೆ ಕಂಡು ಹತಾಶರಾಗುತ್ತೇ ವೆ. ಹಾಗೆ ನೋಡಿದರೆ ಬದುಕು ಬದಲಾವಣೆಯ ಆಗರವೇ ಅಲ್ಲವೇ? ಪ್ರತಿನಿತ್ಯ ಅನಿಶ್ಚತತೆ ನಮ್ಮ ಸುತ್ತಲೂ ಸುತ್ತುತ್ತ ಲೇ ಇರುತ್ತದೆ. ಅದರಿಂದ ಪಾರಾಗವುದು ಸುಲಭವಲ್ಲ. ಸುಲಭವಲ್ಲ ಅಂದ ಮಾತ್ರಕ್ಕೆ ಅಸಾಧ್ಯ ಅಂತ ಅರ್ಥವಲ್ಲ. ‘ನಾವು ವಿಶಾಲವಾದ ಗೋಲದೊಳಗೆ ಪ್ರಯಾಣಿಸುತ್ತೇವೆ. ಎಂದೆಂದಿಗೂ ಅನಿಶ್ಚಿತತೆಯಿಂದ ಚಲಿಸುತ್ತೇವೆ’.ಎನ್ನುತ್ತಾ ನೆ ಬ್ಲೇಸ್ ಫಾಸ್ಕಲ್.ಅನಿಶ್ಚಿತತೆಯನ್ನು ಎದುರಿಸುವುದು ಹೇಗೆ ಎಂದು ತಿಳಿಯೋಣ ಬನ್ನಿ,ಗುರಿ ಸ್ಪಷ್ಟಪಡಿಸಿಕೊಳ್ಳಿ. ‘ಬರೆದಿಡಲಾರದ ಗುರಿಯು ಕೇವಲ ಒಂದು ಆಸೆ.ಎನ್ನುತ್ತಾ ರೆ ಬಲ್ಲವರು.ಆದ್ದರಿಂದ ಗುರಿಯನ್ನು ಸ್ಪಷ್ಟವಾಗಿ ದೊಡ್ಡ ಅಕ್ಷರಗಳಲ್ಲಿ ಬರೆದಿಡಿ.ಅದು ಮೇಲಿಂದ ಮೇಲೆ ನಿಮ್ಮ ಕಣ್ಣಿಗೆ ಬೀಳುವಂತಿರಲಿ.ನಿಮ್ಮ ಗಮನ ಸೆಳೆಯುವಂತಿರಲಿ ಸ್ಪಷ್ಟತೆ ಇರದೇ ಇದ್ದಾಗ ಸಮಯವು ಹೇಗೇಗೋ ವ್ಯರ್ಥ ವಾಗಿ ಕಳೆದು ಹೋಗಿ ಬಿಡುತ್ತದೆ.ಇಲ್ಲದ ಅನಿಶ್ವಿತತೆಗಳ ರಾಶಿಯನ್ನು ತಂದು ನಮ್ಮ ಮುಂದೆ ಚೆಲ್ಲುತ್ತದೆ. ಒಂದು ವೇಳೆ ಸಾಗುವ ದಾರಿ ಇದೇ ಅಂತ ಗೊತ್ತಾದರೆ ನಿಶ್ವಿತತೆಗೆ ದೊಡ್ಡ ಮಣೆ ಸಿಗುತ್ತದೆ. ಗುರಿಯೊಂದಿಗೆ ಉದ್ದೇಶಗಳನ್ನು ಸ್ಪಷ್ಟಪಡಿಸಿಕೊಂಡರೆ ನಡೆಯುವ ದಾರಿ ಅನಿಶ್ಚತತೆಯಿಂದ ಪರ‍್ತಿ ಸರಳಗೊಳಿಸಬಹುದು. ಯೋಜನೆಗಳ ಮೂಲಕ ಕೈಗೆತ್ತಿಕೊಳ್ಳಬಹುದು.ಎದೆಗಪ್ಪಿಕೊಳ್ಳಬಹುದು.ನಿರ್ಧಿಷ್ಟ ದಿಕ್ಸೂಚಿ ಬದಲಾವಣೆಗೆ ಪ್ರತಿರೋಧಿಸುವ ಗುಣ ನಮ್ಮ ಜೀನ್ಸಗಳಲ್ಲಿದೆ.ಗುರಿಯತ್ತ ಸಾಗಲು ಒತ್ತಡ ನೋವುಗಳ ನ್ನು ತಾಳಿಕೊಳ್ಳಲಾರದೇ ಪ್ರಯತ್ನಕ್ಕೆ ಮಂಗಳ ಹಾಡುತ್ತೇವೆ ನಡುವೆ ಕೈ ಬಿಡುವ ಜಾಯಮಾನಕ್ಕೆ ಒಗ್ಗಿಕೊಂಡ ಮನಸ್ಸಿ ಗೆ ಇದೆಲ್ಲ ಬೇಡವಾಗುತ್ತದೆ.ಕೂಲಂಕಷವಾಗಿ ಅವಲೋಕಿ ಸಿದರೆ ಒಂದು ವಿಷಯ ಸ್ಪಷ್ಟವಾಗುತ್ತದೆ. ಅದೇನೆಂದರೆ, ಅನಿಶ್ಚಿತತೆಯು ಭಾವನೆಗಳಿಗೆ ಮತ್ತು ಆಲೋಚನೆಗಳಿಗೆ ಲಗ್ಗೆ ಇಡುತ್ತದೆ.ಹೀಗಾಗಿ ಭಾವ ಲೋಕವನ್ನು ಪರಿಶುದ್ಧವಾ ಗಿ ಇಟ್ಟುಕೊಳ್ಳಬೇಕಾಗುತ್ತದೆ.ಗೊತ್ತಿಲ್ಲದ ಪ್ರದೇಶಗಳಿಗೆ ಭೇ ಟಿ ನೀಡುವಾಗ ಅಲ್ಲಿಗೆ ಹೋಗಿ ಬಂದವರನ್ನು ಕೇಳುತ್ತೇವೆ.  ಅದರೊಂದಿಗೆ ಹೋಗುವ ದಾರಿಯ ವಿವರಣೆಯನ್ನು ತಿಳಿ ದುಕೊಳ್ಳುತ್ತೇವೆ ಅಲ್ಲವೇ? ಹಾಗೆಯೇ ನಿಶ್ಚಿತಗೊಳಿಸಿದ ಗುರಿಯಲ್ಲಿ ನೀವೀಗ ಎಲ್ಲಿದ್ದೀರಿ. ಅದನ್ನು ತಲುಪಲು ದಿನ ನಿತ್ಯ ಮಾಡಬೇಕಾದ ಕಾರ‍್ಯಗಳ ಪಟ್ಟಿಯನ್ನು, ಮಾಡುವ ಕೆಲಸದ ವೇಳಾ ಪಟ್ಟಿಯನ್ನು ತಯಾರಿಸಿಕೊಳ್ಳುವುದರಿಂದ ಅನಿಶ್ಚಿತತೆಯಿಂದ ದೂರ ಬರಬಹುದು. ವೇಳಾ ಪಟ್ಟಿಯು ನಿಮ್ಮನ್ನು ನಿರ‍್ದೇಶಿಸುತ್ತದೆ. ಯೋಜನೆಗಳಲ್ಲಿ ಮಾಡಿಕೊಳ್ಳ ಬೇಕಾದ ಬದಲಾವಣೆಗಳು ಅದರಲ್ಲಿ ತೊಡಗಿಕೊಂಡ ಮೇಲೆ ದಿನೇ ದಿನೇ ಸ್ಪಷ್ಟವಾದ ಚಿತ್ರವನ್ನು ನೀಡುತ್ತ ಹೋ ಗುತ್ತವೆ.ಆದ್ದರಿಂದ ಒಂದು ವೇಳಾ ಪಟ್ಟಿಯನ್ನು ನಿರ‍್ಧಿಷ್ಟ   ದಿಕ್ಸೂಚಿಯಂತೆ ಬಳಸುವುದು ಉತ್ತಮ ಮಾರ್ಗವೆಂದರೆ ಏಕಾಗ್ರತೆ. ಬದುಕಿನಲ್ಲಿ ಎಲ್ಲವೂ ನಮ್ಮ ನಿಯಂತ್ರಣದಲ್ಲಿಲ್ಲ.ಕೆಲವು ಸಂಗತಿಗಳು ನಿಯಂತ್ರಣದಾಚೆಗೆ ಇವೆ.ಅವುಗಳ ಬಗ್ಗೆ ತಲೆ ಕೆಡಿಸಿಕೊಳ್ಳದಿರುವುದೇ ಉಚಿತ.ಸಾಮಾಜಿಕ ಜಾಲ ತಾಣ ಗಳಲ್ಲಿ ಕಳೆಯುವ ಬಹುತೇಕ ಸಮಯ ಕೃತಕ ಖುಷಿ ನೀಡ ಡುತ್ತದೆ.ಅಲ್ಲಿ ಕಳೆಯುವ ಸಮಯವನ್ನು ಮಿತಿಗೊಳಿಸು ವುದು ನಮ್ಮ ನಿಯಂತ್ರಣದಲ್ಲಿದೆ.ಅನಿಶ್ಚತತೆಯನ್ನು ನೀಗಿ ಸಲು ಅನೇಕ ಹಂತಗಳು ನಮ್ಮ ಕೈಯಲ್ಲೇ ಇವೆ.ಕೆಲವು ಸಮಯ ನೀವು ವಾಟ್ಸಪ್ ಫೇಸ್ ಬುಕ್ ನೋಡದಿದ್ದರೆ ರಾತ್ರೋ ರಾತ್ರಿ ಏನೂ ಆಗಿ ಬಿಡಲ್ಲ.ಕಾರ‍್ಯದೆಡೆಗಿನ ಸರಳ ಶಿಸ್ತು,ನಿರ‍್ಧಿಷ್ಟವಾದುದರ ಮೇಲಿನ ಕೇಂದ್ರೀಕರಿಸುವಿಕೆ ಫಲಿತಾಂಶವನ್ನು ಎತ್ತರಕ್ಕೇರಿಸುತ್ತದೆ.ಉತ್ಕೃಷ್ಟತೆ ಎಂದರೆ ಕೇಂದ್ರೀಕರಿಸುವಿಕೆ ಪರಿಣಾಮಕಾರಿಯಾಗಿ ಕಾರ‍್ಯ ನಿರ‍್ವಹಿ ಸಲು ಪ್ರಯತ್ನ ಮಾಡುವುದು.ಒಮ್ಮೆ ನೆಪೋಲಿಯನ್ ಹೀ ಗೆ ಹೇಳಿದನು: ‘ಏಕಾಗ್ರತೆಯಿಂದ ಯಾವನು ಪ್ರಯತ್ನಿಸು ವುದಿಲ್ಲವೋ, ಅವನು ಎಂದೂ ಯಶಸ್ವಿಯಾಗಲಾರನು. ಸಮಯ ಅಮೂಲ್ಯ ಸಮಯವನ್ನು ಹೆಚ್ಚು ಸಮರ್ಥವಾ ಗಿ ನಿರ‍್ವಹಿಸಲು ಬದ್ಧರಾಗಬೇಕು. ‘ಸಮಯವೇ ಜೀವನ.’ ಒಮ್ಮೆ ಕಳೆದು ಹೋದರೆ ಮರಳಿ ಸಿಗದ ಸಂಪತ್ತು ಎಂಬ ಗಾಢ ಭಾವವನ್ನು ಬೆಳೆಸಿಕೊಳ್ಳಬೇಕು.ಇತರರು ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಲು ಬಿಡಬೇಡಿ. ಬರೀ ಚಟುವಟಿಕೆಯಿಂದ ಕೂಡಿದ ಕೆಲಸಗಳಲ್ಲಿ ತೊಡಗಿ ಕೊಳ್ಳುವುದನ್ನು ಬಿಟ್ಟು ಉತ್ಪಾದನಶೀಲ ಕಾರ‍್ಯಕ್ಕೆ ಒತ್ತು ಕೊಡಬೇಕು.‘ಕಾಲದ ಪ್ರಯೋಜನ ಗೊತ್ತಿರದವರಿಗೆ ದಿನ ವು ಬಹು ದುಗರ್ಮವಾಗುತ್ತದೆ’.ಎನ್ನುತ್ತಾನೆ ಬುದ್ಧ.ಅನಿಶ್ಚಿ ತ ಸಮಯದಲ್ಲಿ ಕೈಯಲ್ಲಿರುವ ಸಮಯ ಒಂದು ಅವಕಾ ಶದಂತೆ ಅದನ್ನು ಸಿದ್ಧತೆಗಾಗಿ ಬಳಸಿಕೊಳ್ಳಬೇಕು.ಇದನ್ನೇ ಡಿಸ್ರೆಲ್ ಹೀಗೆ ಹೇಳುತ್ತಾನೆ,’ಅವಕಾಶವು ಎದುರಾದಾಗ ಅದನ್ನು ಎದುರುಗೊಳ್ಳುವ ಸಿದ್ಧತೆಯಲ್ಲಿರುವುದೇ ಯಶ ಸ್ವಿ ಜೀವನದ ರಹಸ್ಯವಾಗಿದೆ’.ಅಚ್ಚರಿಗಳಿಗೆ ಮುಕ್ತ ವಾಗಿರಿ ‘ಸುಂದರ ಬದುಕು ಒಂದು ಆಕಸ್ಮಿಕವಲ್ಲ.’ ಬದುಕು ಸುಂದ ರವಾಗಿಲ್ಲ ಅದನ್ನು ನಾವೇ ಸುಂದರವಾಗಿವಾಗಿಸಿ ಕೊಳ್ಳ ಬೇಕು.ಬದುಕು ಅಚ್ಚರಿಗಳ ಆಗರವೂ ಹೌದು. ಹೀಗಾಗಿ ಅಚ್ಚರಿಗಳು ನಡದೇ ಇರುತ್ತವೆ.ಆದ್ದರಿಂದ ಅಚ್ಚರಿಗಳನ್ನು ಮುಕ್ತವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇ ಕು.ಅಚ್ಚರಿಗಳಿಗೆ ಸಿದ್ದತೆ ಮಾಡಿಕೊಳ್ಳಲು ಕಲಿಯಬೇಕು. ಅದನ್ನು ಹಿರಿಯರ ಹಿತೋಪದೇಶದಿಂದಲೂ ಕಲಿಯಬ ಹುದು.ಅಚ್ಚರಿಗಳು ಅದ್ಭುತವನ್ನು ನೀಡುತ್ತವೆ.’ಯಾಕೋ ಏನೋ ಈ ಪ್ರಪಂಚದಲ್ಲಿ ಉಪದೇಶವೆಂದರೆ ಯಾರೂ ಇಷ್ಟ ಪಡುವುದಿಲ್ಲ.ನಿಜಕ್ಕೂ ಅವುಗಳ ಅಗತ್ಯ ಹೆಚ್ಚಾಗಿರು ವವರು ಅವುಗಳನ್ನು ತೀರಾ ಕಡಿಮೆ ಇಷ್ಟ ಪಡುತ್ತಿರುತ್ತಾರೆ  ಎಂದಿದ್ದಾನೆ ಜಾನ್ಸನ್.ಅನಿಶ್ಚತತೆಯ ಸವಾಲುಗಳನ್ನು ತೊಡೆದು ಹಾಕಲಾಗುವುದಿಲ್ಲ ಸ್ವೀಕರಿಸಲೇಬೇಕು. ಅನಿಶ್ಚಿತತೆಯನ್ನು ಎದುರಿಸುವಲ್ಲಿ ತಪ್ಪುಗಳಾಗಬಹುದು ಆದರೆ ನಿಂತಲ್ಲೇ ಕೊಳೆಯುವುದಕ್ಕಿಂತ ತಪ್ಪು ಮಾಡಿ ಅನಿಶ್ಚತತೆಯನ್ನು ಎದುರಿಸುವುದು ಉತ್ತಮವಲ್ಲವೇ? ***************

ದಿಕ್ಸೂಚಿ Read Post »

You cannot copy content of this page

Scroll to Top