ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಗಜೇಶ ಮಸಣಯ್ಯ ಗಜೇಶ ಮಸಣಯ್ಯನವರ  ವಚನಗಳು ಶರಣಸತಿ ಲಿಂಗಪತಿ ಭಾವ, ಷಟ್ಸ್ಥಲ ಸಿದ್ಧಾಂತ ಮತ್ತು ಆತ್ಮಜ್ಞಾನದ ಆಳವಾದ ತಿಳುವಳಿಕೆಯನ್ನು ಒಳಗೊಂಡಿವೆ. ಬಸವಣ್ಣನವರ ಕೀರ್ತಿಯನ್ನು ಕೇಳಿ ಇವರು ತಮ್ಮ ಮಡದಿಯೊಂದಿಗೆ ಕಲ್ಯಾಣಕ್ಕೆ ಬಂದು ಅನುಭವ ಮಂಟಪದ ಗೋಷ್ಠಿಗಳಲ್ಲಿ ಪಾಲ್ಗೊಳ್ಳುತ್ತಿದ್ದರು.  ಇವರು ಅಕ್ಕಲಕೋಟೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಜನಿಸಿದರು. ಒಬ್ಬಶ್ರೇಷ್ಠಅನುಭಾವಿ ಚಿಂತಕ ಬಸವಕಾಲಿನಶರಣರು.   ಕಾಲ – ಹನ್ನೆರಡನೆಯ ಶತಮಾನಒಟ್ಟು ವಚನಗಳು 70 ಜನ್ಮ ಸ್ಥಳ  ಇವರು ಅಕ್ಕಲಕೋಟೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಜನಿಸಿದರು.ಅಂಕಿತ -ಮಹಾಲಿಂಗ ಗಜೇಶ್ವರ”. ಮಡದಿ -ಗಜೇಶ ಮಸಣಮ್ಮಐಕ್ಯ ಸ್ಥಳ – ಕಲ್ಯಾಣ ಕ್ರಾಂತಿಯ ನಂತರದಲ್ಲಿ ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ಮನಹಳ್ಳಿ ಗ್ರಾಮದಲ್ಲಿದ್ದು ಕೊನೆಗೆ ಅಲ್ಲಿಯೇ ಐಕ್ಯರಾದರೆಂದು ಕೆಲವರು ಹೇಳಿದರೆ, ಅಕ್ಕಲಕೋಟೆಯ ಕರ್ಜಗಿ ಗ್ರಾಮದಲ್ಲಿ ಐಕ್ಯರಾದರೆಂದು ತಿಳಿದು ಬರುತ್ತದೆ.   12 ನೇ ಶತಮಾನದ ಅಪ್ರಸಿದ್ದ ವಚನಕಾರ, ಅಕಲಕೋಟೆ ತಾಲ್ಲೋಕಿನ ಕರಜಗಿ ಗ್ರಾಮದ ನಿವಾಸಿ. ಬಸವಾದಿ ಶರಣರ ಸಮಕಾಲೀನ. ಈತನ ಪತ್ನಿಯ ಹೆಸರು ಏನೆಂದು ತಿಳಿಯುವುದಿಲ್ಲವಾದರೂ ಆಕೆಯೂ ವಚನಕಾರ್ತಿಯಾಗಿರುವುದನ್ನು ಗಮನಿಸಬಹುದಾಗಿದೆ. ಇಂತಹ ಒಂದೆರಡು ಪ್ರಸಂಗಗಳು ವಚನ ಸಾಹಿತ್ಯಯುಗದಲ್ಲಿ ದಾಖಲಾಗಿವೆ. ಅವೆಲ್ಲವೂ ಷಟ್ಸ್ಥಲಸಿದ್ದಾಂತದ ವಿವರಗಳನ್ನು, ಆತ್ಮಜ್ಞಾನದ ತಿಳುವಳಿಕೆಯನ್ನು ಒಳಗೊಂಡಿವೆ. ಇವರ ವಚನಗಳ ಅಂಕಿತ “ಮಹಾಲಿಂಗ ಗಜೇಶ್ವರ”. ಹೊಸ ಮದುವೆ ಹಸೆ ಉಡುಗದ ಮುನ್ನಹೂಸಿದರಿಶಿನ ಬಿಸಿಲಿಂಗೆ ಹರಿಯದ ಮುನ್ನನೀರ ತಾಳ್ಮೆ ಹರಿಯದ ಮುನ್ನತನು ಸಂಚಳವಾಗಿ, ಮನ ಗುರುಕಾರುಣ್ಯವ ಪಡೆದುಹುಸಿ ಇಲ್ಲದಿದ್ದಡೆ ಭಕ್ತನೆಂಬೆಪಿಡಿಯಲಿಲ್ಲದಿದ್ದಡೆ ಮಾಹೇಶ್ವರನೆಂಬೆತನುವಿಲ್ಲದಿದ್ದಡೆ ಪ್ರಸಾದಿ ಎಂಬೆಭೇಧವಿಲ್ಲದಿದ್ದಡೆ ಪ್ರಾಣಲಿಂಗಿ ಎಂಬೆಆಸೆ ಇಲ್ಲದಿದ್ದಡೆ ಶರಣನೆಂಬೆಐವರ ಸಂಪರ್ಕ ಭೋಗವಾ[ಗ]ದಡೆ ಐಕ್ಯನೆಂಬೆಐಕ್ಯದ ಸಂತೋಷ ಹಿಂಗಿದಡೆ ಜ್ಯೋತಿರ್ಮಯವೆಂಬೆಇಂತಾಗಬೇಕೆಂಬ ಮನದ ದೇಹಇರಿದಡರಿಯದು, ಸ್ತುತಿಸಿದಡರಿಯದುಸುಖವನರಿಯದು, ದುಃಖವನರಿಯದುಈ ಚತಿರ್ವಿಧ ತಾಗು ನಿರೋಧವನರಿಯದಿರ್ದಡೆಅದೇ ಮಹಾಲಿಂಗ ಗಜೇಶ್ವರನೆಂಬೆ ಎನ್ನ ಕರಸ್ಥಲವೇ ಬಸವಣ್ಣನಯ್ಯಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯಎನ್ನ ಭಾವ ಸ್ಥಲವೇಪ್ರಭುದೇವರಯ್ಯ,ಇಂತೆನ್ನ ಕರ ಮನ ಭಾವಂಗಳಲ್ಲಿ  ಇಷ್ಟ ಪ್ರಾಣ ಭಾವಂಗಳು ತಳ್ಳಿಯವಾಗಿ    ಮಹಾಲಿಂಗ ಗಜೇಶ್ವರನಿಮ್ಮ ಶರಣರ ಘನವನುಎನ್ನ ಸರ್ವಾಂಗದಲ್ಲಿ  ಕಂಡು ಪರಮ ಸುಖಿಯಾಗಿರ್ದೆನು.                                         ಗಜೇಶ ಮಸಣಯ್ಯ -ವಚನ ಸಂಖ್ಯೆ 213 ಪುಟ 78 ಸಂಪುಟ 7ಇದು ಮಹಾ ಅನುಭವಿ ಗಜೇಶ ಮಸಣಯ್ಯನವರ ಅಪರೂಪದ ವಚನವಾಗಿದೆ. ಇಷ್ಟಲಿಂಗ ಪ್ರಾಣ ಲಿಂಗ ಭಾವಲಿಂಗಗಳು ತನ್ನ ಬದುಕಿನಲ್ಲಿ  ಹೇಗೆ ಅಳವಡಿಸಿಕೊಂಡನು ಮಸಣಯ್ಯ   ಎಂದು ಸುಂದರವಾಗಿ ಸಾದರಪಡಿಸಿದ್ದಾನೆ .ಎನ್ನ ಕರಸ್ಥಲವೇ ಬಸವಣ್ಣನಯ್ಯ———————————-ಗುರು ಲಿಂಗ ಜಂಗಮ – ಉಪಾದಿತವಲ್ಲ ಅವು ತತ್ವಗುಣಗಳು .ಶರೀರದಲ್ಲಿಯೇ ಇರುವ ಗುರು ಲಿಂಗ ಜಂಗಮ  ತತ್ವವವನ್ನು ವಿಸ್ತಾರಗೊಳಿಸಿ ಆಚರಿಸುವ ಸಲುವಾಗಿ, ಸುಲಭ ಸಾಧನವೆಂಬ ಇಷ್ಟಲಿಂಗ (ಕುರುಹು) ವನ್ನು ಪರಿಕಲ್ಪಿಸಿಕೊಟ್ಟು, ಸಮಸ್ತ ಜನವರ್ಗವನ್ನು ಪಾವನ ಮಾಡಿದವನು ಬಸವಣ್ಣ.ಕರಸ್ಥಲಕ್ಕೆ   ಪರಂಜ್ಯೋತಿಯ ಕುರುಹು ತಂದಿಟ್ಟ ಕರಣ ಬಸವಣ್ಣ ತನ್ನ ಕರಸ್ಥಲದಲ್ಲಿದ್ದನಯ್ಯ ಬಸವಣ್ಣನು ಎಂದಿದ್ದಾನೆ  ಗಜೇಶ ಮಸಣಯ್ಯ . ಇದನ್ನು ಚಾಮರಸನು ಅತ್ಯಂತ ಸುಂದರವಾಗಿ ಹೀಗೆ ಹೇಳಿದ್ದಾನೆ. ಕಾಯದೊಳು ಗುರು ಲಿಂಗ ಜಂಗಮದಾಯತವನರಿಯಲ್ಕೆ ಸುಲಭೋಪಾಯದಿಂದಿದಿರಿಟ್ಟು ಬಾಹ್ಯಸ್ಥಲಕೆ ಕುರುಹಾಗಿ |ದಾಯದೋರಿ ಸಮಸ್ತ ಭಕ್ತ ನಿಕಾಯವನು ಪಾವನವ ಮಾಡಿದರಾಯ ಪೂರ್ವಾಚಾರ್ಯ ಸಂಗನಬಸವ ಶರಣಾರ್ಥಿ||  ಚಾಮರಸ ( ಪ್ರಭು ಲಿಂಗ ಲೀಲೆ ) ಗಜೇಶ ಮಸಣಯ್ಯನವರು ಬಸವಣ್ಣ ತನ್ನ ಕರಸ್ಥಲದ ಚೇತನ ಕಾರಸ್ತಹದಲ್ಲಿ ಇಂಬುಗೊಂಡ ಲಿಂಗದ ಜನಕ ಎಂತಲೂ ಹೇಳಿದ್ದಾನೆ. ಕರಸ್ಥದಲ್ಲಿರುವ ಲಿಂಗವು ಜಂಗಮ ಸಮಾಜ ಎಂತಾದರೆ ಮಸಣಯ್ಯನವರಿಗೆ ಅದು ಬಸವಣ್ಣ ಮಾತ್ರ.ಕರಸ್ಥಲದಿಂದ ಕಾಯಕ ಮಾಡಿ ದಾಸೋಹ ಮಾಡುವ ತತ್ವವ ನೀಡಿದ ಬಸವಣ್ಣ ತನ್ನ ನಿಜದ ಅರಿವಿನ ಗುರು ಎಂದಿದ್ದಾನೆ. ಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯ————————————–ಕರವು ಬಸವಣ್ಣನವರು ನೀಡಿದ ಇಷ್ಟಲಿಂಗದಿಂದ ಚುಳುಕಾಗಿ ಜಂಗಮ ಜ್ಞಾನಕ್ಕೆ ಕಾಲಿಡುವಾಗ ಮುಂದಿನ ಅಂತರಂಗದ ವಿಕಸತನದಲ್ಲಿ  ಚೆನ್ನ ಬಸವಣ್ಣ ಮನದ ಮೂರುತಿಯಾಗುತ್ತಾರೆ.ಮಾನಸಿಕವಾಗಿ ಬೌದ್ಧಿಕವಾಗಿ ಬಾಹ್ಯ ಶರೀರದಿಂದ ಆತ್ಮದ ಒಳಗೆ ಪ್ರವೇಶ ಮಾಡುವಾಗ ಚೆನ್ನ ಬಸವಣ್ಣನವರ ಷಟಸ್ಥಲ ಕರಣ ಹಸಿಗೆ ಕೊಡುಗೆ ಅಪಾರವಾಗಿದೆ..ಹೀಗಾಗಿ ಚೆನ್ನ ಬಸವಣ್ಣನವರ ಅನುಭವ ತಮ್ಮ ಪ್ರಾಣಲಿಂಗವಾಯಿತ್ತು ಎಂದು ಇಷ್ಟಲಿಂಗವೆಂಬ ಸ್ಥಾವರ ಭಾವವನ್ನು  ತೊರೆದು ಚೆನ್ನಬಸವಣ್ಣನವರ ಅನುಭವವೇ ಮೌಲ್ಯ ಅವುಗಳೇ ತಮಗೆ ಪ್ರಾಣಲಿಂಗವಾಗಿಸಲು ಅಂತರಂಗದ ಆತ್ಮ ವಿಮರ್ಶೆ ಆತ್ಮಾವಲೋಕನ ಅಗತ್ಯವಾಗಿದೆ ಎಂದಿದ್ದಾರೆ ಮಸಣಯ್ಯನವರು. ಎನ್ನ ಭಾವಸ್ಥಲವೇ ಪ್ರಭುದೇವರಯ್ಯ,———————————–ಇಷ್ಟಲಿಂಗ ಬಸವಣ್ಣ  ಪ್ರಾಣಲಿಂಗಚೆನ್ನಬಸವಣ್ಣನವರ ಜ್ಞಾನ ಪಡೆದ ಶರಣನು ಅಲ್ಲಮ ಪ್ರಭುದೇವರ ಉದಾತ್ತೀಕರಣ . ನಿರ್ದೇಹಿ ತತ್ವ   ಶರಣ ಸಂಕುಲಕ್ಕೆ ಆಕರ್ಷಣೆ ಮತ್ತು ಅನುಕರಣೀಯವಾಗಿದೆ.ಅಲ್ಲಮರ ಅನುಭಾವವು ಚಿಂತನೆಗಳು ಜಗತ್ತಿನ ಇಂದಿಗೂ ಆದರಣೀಯವಾದ ಮೌಲ್ಯಗಳು . ಇಷ್ಟಲಿಂಗವೆಂಬುದು ಅರಿವಿನ ಕುರು ಇಷ್ಟಲಿಂಗವು ಯೋಗ ಸಾಧನವು. ಅದನ್ನು ಮನದಲ್ಲಿರಿಸಿಕೊಂಡು ಪ್ರಾಣಜೀವಕ್ಕೆ ಸಂಚಯಿಸುವುದು ಪ್ರಾಣಲಿಂಗವು ಅದು ಚೆನ್ನಬಸವಣ್ಣನವರಜ್ಞಾನ ಮತ್ತು ಅನುಭವವು. ಪ್ರಾಣಮಯ ಮಾಡಿದ ಲಿಂಗ ಜ್ಞಾನವು ಭಾವಲಿಂಗವಾಗಿ ಸೃಷ್ಟಿ ಸ್ಥಿತಿ ಲಯಗಳ ಮಧ್ಯೆ ಪಂಚ ಮಹಾಭೂತಗಳ ಚೇಷ್ಟೆ ಕಾರ್ಯಗಳನ್ನು ಪಂಚೇಂದ್ರಿಗಳ ಮೂಲಕ ಅನುಭವಿಸುವ ಭಾವ ಲಿಂಗವೇ ಅಲ್ಲಮ ಪ್ರಭುಗಳು ಎಂದೆನ್ನುತ್ತಾರೆ ಮಸಣಯ್ಯನವರು. ಇಂತೆನ್ನ ಕರ ಮನ ಭಾವಂಗಳಲ್ಲಿ    ಇಷ್ಟ ಪ್ರಾಣ ಭಾವಂಗಳು ತಳ್ಳಿಯವಾಗಿ——————————————————————————ಈ ರೀತಿಯಾಗಿ ಇಷ್ಟ ಲಿಂಗ ಪ್ರಾಣಲಿಂಗ ಭಾವಲಿಂಗವು ತನ್ನ ಕಾಯದೊಳು ಕೂಡಿಕೊಂಡು ತನ್ನ ಶರೀರವನ್ನುಪ್ರಾಣವನ್ನು  ಮನವನ್ನು ಭಾವವನ್ನು ಶುದ್ಧ ಮಾಡುವ  ಪರಿ ಅದ್ಭುತವಾಗಿದೆ . ಇಷ್ಟ ಪ್ರಾಣ ಭಾವ ಲಿಂಗವೆನ್ನುವುದು   ಒಂದು ಮುಹೂರ್ತ ಸ್ವರೂಪ . ಭಕ್ತನ ಆಧ್ಯಾತ್ಮಿಕ ವಿಕಸನದ ಒಳ ಪಯಣ .ಬಾಹ್ಯವಾಗಿ ಬದುಕಲುಅಣಿಯಾಗುವ ಉಪಕ್ರಮ ಮಾತ್ರ . ಇದೆ ಕಾರಣಕ್ಕೆ ಬಸವಣ್ಣನವರು ಇದೆ ಅಂತರಂಗದ ಶುದ್ಧಿ ಇದೆ ಬಹಿರಂಗದ ಶುದ್ಧಿ ಎಂದಿದ್ದಾರೆ.ಒಳಗಿನ ಶುಚಿತ್ವವು ಹೊರಗಿನ ಸುಂದರತೆಗೆ ತತ್ವ ನಿಷ್ಠೆಗೆ ಕಾರಣವಾಗುತ್ತದೆ. ಶರಣ ಸಂಸ್ಕೃತಿಗೆ ಬಸವಣ್ಣ  ಚೆನ್ನ ಬಸವಣ್ಣ ಮತ್ತು ಅಲ್ಲಮಪ್ರಭುಗಳ ಅನುಭಾವ ಅನುಪಮವಾದದ್ದು ಎಂದು ಮಸಣಯ್ಯ ಶರಣ ಅವರನ್ನು ನೆನೆದಿದ್ದಾನೆ. ಮಹಾಲಿಂಗ ಗಜೇಶ್ವರ ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲ್ಲಿ  ಕಂಡು ಪರಮ ಸುಖಿಯಾಗಿರ್ದೆನು.————————————————————————————————–ಶರಣರ ಆಧ್ಯಾತ್ಮಿಕ ಸಾಧನೆಯಲ್ಲಿ ಅಲ್ಲಮ ಬಸವಣ್ಣ ಸಿದ್ಧರಾಮ ಅಕ್ಕಮಹಾದೇವಿ ಚೆನ್ನ ಬಸವಣ್ಣ ಮಡಿವಾಳ ಮಾಚಿದೇವ ಕಕ್ಕಯ್ಯ ಹೀಗೆ ಸಾವಿರಾರು ಶರಣರುತಮ್ಮ ಅನುಭಗಳ ನಿಜದ ನಿಲುವುಗಳನ್ನು ಅನುಭವ ಮಂಟಪದಲ್ಲಿ ನಿರಂತರವಾಗಿ ಪ್ರಕಟಗೊಳಿಸಿ ಶರಣಾತ ತತ್ವಗಳನ್ನು ಇನ್ನಷ್ಟು ಬಲಗೊಳಿಸಿದ್ದಾರೆ.ಆ ಕಾರಣ ತನ್ನ ಚೈತನ್ಯದ ಕುರುಹು ಮಹಾಲಿಂಗ ಗಜೇಶ್ವರ ಎಂಬುದಾಗಿ ಆತ್ಮ ನಿವೇದನೆ ಮಾಡಿಕೊಳ್ಳುತ್ತಾ ಗಜೇಶ ಮಸಣಯ್ಯನವರು ಪ್ರತಿ ಸಾಧಕರ ಶರಣರ ಘನವಾದ ನಿಲುವುಗಳನ್ನು ತಮ್ಮ ಅಂಗ ಗುಣ ಕಾಯದಲ್ಲಿ ಸರ್ವಾಂಗದಲ್ಲಿ ಕಂಡು ಪರಮ ಸುಖಿಯಾದೆನು ಎಂದು ಅಭಿಮಾನದಿಂದ ಹೇಳಿಕೊಂಡಿದ್ದಾರೆ.ಇಷ್ಟಲಿಂಗ ಸಾಧಕನ ಗಟ್ಟಿ ಮುಟ್ಟದ ಸಂಕೇತ ಅರಿವಿನ ಕುರುಹು ಅದನ್ನು ಕೊಟ್ಟ ಬಸವಣ್ಣ ಸಮಗ್ರ ಪಯಣದ ಚಿಂತನೆಗಳ ಆರಂಭಿಕ ಸೂತ್ರಧಾರ . ಇಷ್ಟಲಿಂಗವು ನಿತ್ಯ ಯೋಗಕ್ಕೆ ಸಾಧನ ಹಾಗು ಬಹು ಮುಖ್ಯ ಸಾಧನೆಯ ಮೆಟ್ಟಿಲು. ಇಷ್ಟಲಿಂಗದ ಯೋಗದೊಳು ಹೊಕ್ಕು ನಿರಂತರವಾಗಿ ವಿಕಸಿತವಾಗಿ ಅವುಗಳನ್ನು ಪ್ರಾಣದಲ್ಲಿ ಪ್ರತಿಷ್ಠಾಪನೆ   ಮಾಡಿದಲ್ಲಿ ಅಲ್ಲಿ ಪ್ರಾಣವು ಆನಂದಕರ ಭಾವವನ್ನು ಹೊಂದುತ್ತದೆ ಅದು ಮುಂದೆ ಭಾವಕ್ಕೆ ತಲುಪಿ ಮನವು ಪ್ರಸನ್ನ ಭಾವವಾಗುತ್ತದೆ. ಅದುವೇ ಕಾಯ ಪ್ರಸಾದ ಗುಣವಾಗುವ ಸಿದ್ಧಿಯೋಗ. ಬಸವಣ್ಣ ಸ್ಥೂಲ ಚೆನ್ನಬಸವಣ್ಣ ಸೂಕ್ಷ್ಮ ಮತ್ತು ಅಲ್ಲಮ ಪ್ರಭುಗಳು ಕಾರಣ ಶರೀರಕ್ಕೆ ಪ್ರತಿನಿಧಿಗಳಾಗುತ್ತಾರೆ.ಇದನ್ನು ಭಕ್ತನು ನಿತ್ಯ ನಿರಂತರವಾಗಿ ಕೈಗೊಂಡಾಗ ಮಾತ್ರ ಅನಂತಹ ಎತ್ತರದ ನಿಲುವನ್ನು ಕಾಣಲುಸಾದ್ಯ  ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ 

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಅಂಕಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಸಮಾಜವಾದಿ ಚಿಂತಕರು,ಗಾಂಧಿವಾದಿಡಾ ಕುಮಾರ ಸಪ್ತರ್ಷಿ ಗ್ರಾಮ ರಾಜ್ಯದ ಕನಸು ಕಂಡ ಅಪ್ಪಟ ಗಾಂಧಿವಾದಿ ಡಾ. ಕುಮಾರ ಸಪ್ತರ್ಷಿ ಅವರು ಮಹಾರಾಷ್ಟ್ರದ ಪ್ರಸಿದ್ಧ ಹಿರಿಯ ಸಮಾಜವಾದಿ ಚಿಂತಕರು, ಗಾಂಧಿವಾದಿ ಹೋರಾಟಗಾರರು ಮತ್ತು ಯುವ ನಾಯಕರಾಗಿದ್ದರು. ಅವರು ಮಹಾರಾಷ್ಟ್ರದ ಸಾಮಾಜಿಕ, ರಾಜಕೀಯ ಮತ್ತು ಪ್ರಗತಿಪರ ಚಳವಳಿಗಳಲ್ಲಿ ದಶಕಗಳ ಕಾಲ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ದುರದೃಷ್ಟವಶಾತ್, ಅವರು ತಮ್ಮ 85ನೇ ವಯಸ್ಸಿನಲ್ಲಿ 18 ಜುಲೈ 2026 ರಂದು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿನಿಧನರಾದರು. 1941ರ ಆಗಸ್ಟ್ 21ರಂದು ಜನಿಸಿದ ಸಪ್ತರ್ಷಿ ಅವರು ಬಿಹಾರದ ಗಯಾದಲ್ಲಿ ಜಯಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ತಮ್ಮ ಸಾಮಾಜಿಕ ಜೀವನವನ್ನು ಆರಂಭಿಸಿದರು; ಅಲ್ಲಿ ಅವರು ಬರಗಾಲದಿಂದ ತೊಂದರೆಗೀಡಾದ ಜನರಿಗಾಗಿ ಸಹಾಯ ಕೇಂದ್ರವೊಂದನ್ನು ನಡೆಸುತ್ತಿದ್ದರು. ಅವರು 1967ರ ನವೆಂಬರ್‌ನಲ್ಲಿ ‘ಯುಕ್ರಂದ್’ (Yukrand) ಸಂಘಟನೆಯನ್ನು ಸ್ಥಾಪಿಸಿದರು. ಮಹಾರಾಷ್ಟ್ರದ ಇತಿಹಾಸದಲ್ಲಿ ‘ಯುಕ್ರಂದ್’ ಕಾಲಘಟ್ಟವು ಮಹತ್ವದ ಸ್ಥಾನವನ್ನು ಹೊಂದಿದೆ, ಏಕೆಂದರೆ ಇದು ಸಾಮಾಜಿಕ ನ್ಯಾಯದ ವಿಷಯವನ್ನು ಬಲವಾಗಿ ಎತ್ತಿಕೊಂಡ ಸಮಾಜವಾದಿ ನಾಯಕರ ಗುಂಪಾಗಿತ್ತು. ಜಾತಿ ತಾರತಮ್ಯದ ವಿಷಯದಲ್ಲಿ ಈ ಸಂಘಟನೆಯು ಎಷ್ಟು ಸಕ್ರಿಯವಾಗಿತ್ತೆಂದರೆ, ಮುಂದಿನದಿನಗಳಲ್ಲಿಅದು ‘ದಲಿತ ಪ್ಯಾಂಥರ್’ ಜೊತೆಗೂಡಿ ಜಂಟಿ ಹೋರಾಟಗಳನ್ನು ನಡೆಸಿತು. ಕುಮಾರ ಸಪ್ತರ್ಷಿ ಅವರ ಜೀವನ ಮತ್ತು ಪ್ರಮುಖ ಕಾರ್ಯಗಳ  ಪ್ರಮುಖ ಸಾಧನೆಗಳು ಮತ್ತು ಸಂಘಟನೆಗಳು ಯುವಕ ಕ್ರಾಂತಿ ದಳ (ಯುಕ್ರಾಂದ್): ಯುವಕರಲ್ಲಿ ಸಾಮಾಜಿಕ ಪ್ರಜ್ಞೆ ಮತ್ತು ಪ್ರಗತಿಪರ ಆಲೋಚನೆಗಳನ್ನು ಬೆಳೆಸಲು ಅವರು 1967 ರಲ್ಲಿ ಈ ಪ್ರಭಾವಿ ಯುವ ಸಂಘಟನೆಯನ್ನು ಸ್ಥಾಪಿಸಿದರು. ಮಹಾರಾಷ್ಟ್ರ ಗಾಂಧಿ ಸ್ಮಾರಕ ನಿಧಿ: ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ, ಗಾಂಧಿವಾದಿ ತತ್ವಗಳನ್ನು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೊಸ ಪೀಳಿಗೆಗೆ ತಲುಪಿಸಲು ಶ್ರಮಿಸಿದರು.ಸಾಮಾಜಿಕ ಹೋರಾಟಗಳು: ಭ್ರಷ್ಟಾಚಾರ, ಸಾಮಾಜಿಕ ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ನಿರಂತರವಾಗಿ ಧ್ವನಿ ಎತ್ತಿದ್ದ ಅವರು, ವಿವಿಧ ಆಂದೋಲನಗಳ ಭಾಗವಾಗಿ ಸುಮಾರು 35 ಕ್ಕೂ ಹೆಚ್ಚು ಬಾರಿ ಜೈಲು ಸೇರಿದ್ದರು.  ತುರ್ತು ಪರಿಸ್ಥಿತಿಯ (Emergency) ಸಮಯದಲ್ಲಿ ಅವರು ‘ಮಿಸಾ’ (MISA) ಕಾಯ್ದೆಯಡಿ ಯೆರವಾಡ ಜೈಲಿನಲ್ಲಿ ಬಂಧಿಯಾಗಿದ್ದರು. ರಾಜಕೀಯ ಮತ್ತು ಸಾಹಿತ್ಯಿಕ ಕೊಡುಗೆಶಾಸಕರಾಗಿ ಸೇವೆ: 1977 ರಲ್ಲಿ ಜನತಾ ಪಕ್ಷವನ್ನು ಸೇರಿ, 1978 ರ ವಿಧಾನಸಭಾ ಚುನಾವಣೆಯಲ್ಲಿ ಅಹಮದ್‌ನಗರ ಕ್ಷೇತ್ರದಿಂದ ಶಾಸಕರಾಗಿ (MLA) ಆಯ್ಕೆಯಾಗಿದ್ದರು. *ಪತ್ರಿಕೋದ್ಯಮ ಮತ್ತು ಸಾಹಿತ್ಯ: ಪ್ರಗತಿಪರ ವಿಚಾರಗಳನ್ನು ಹರಡಲು ‘ಸತ್ಯಾಗ್ರಹಿ ಪತ್ರಿಕೋದ್ಯಮ’ (Satyagrahi Vichardhara) ಎಂಬ ಮರಾಠಿ ಮಾಸಿಕ ಪತ್ರಿಕೆಯ ಸಂಪಾದಕರಾಗಿ ದೀರ್ಘಕಾಲ ಕೆಲಸ ಮಾಡಿದರು. ಅವರು ‘ಸಂಕಲ್ಪ’, ‘ಯಾತ್ರಿ’ ಮತ್ತು ‘ಡೇಸ್ ಅಟ್ ಯೆರವಾಡ ಯೂನಿವರ್ಸಿಟಿ’ ಸೇರಿದಂತೆ ಹಲವು ಪ್ರಸಿದ್ಧ ಪುಸ್ತಕಗಳನ್ನು ಬರೆದಿದ್ದಾರೆ. ವೃತ್ತಿಯಿಂದ ವೈದ್ಯರಾಗಿದ್ದರೂ (Medical Doctor), ತಮ್ಮ ಇಡೀ ಜೀವನವನ್ನು ಸಮಾಜ ಸೇವೆ, ಜಾತಿ ನಿರ್ಮೂಲನೆ ಮತ್ತು ಸಮಾನತೆಯ ಹೋರಾಟಕ್ಕಾಗಿ ಮುಡುಪಾಗಿಟ್ಟಿದ್ದರು. ಸಮಾಜವಾದದ ಗಟ್ಟಿ ಕೊಂಡಿಯೊಂದು ಕಳಚಿತಿದೆ. ಬುದ್ಧ ಬಸವ ಮಹಾತ್ಮಾ ಗಾಂಧಿ ಬಾಬಾಸಾಹೇಬ ಅಂಬೇಡ್ಕರ ಅವರ ವಿಚಾರ ಧಾರೆಗೆ ಆಕರ್ಷಿತರಾದ ಇವರು ಜೀವನದಲ್ಲಿ ಬಡವರ ಪರವಾಗಿ ಧ್ವನಿ ಎತ್ತಿದರು. ಜೆಪಿ ಚಳುವಳಿಯ ಮಹಾರಾಷ್ಟ್ರದ ಉಸ್ತುವಾರಿ ವಹಿಸಿದ ಅಪ್ಪಟ ಭಾರತೀಯ ಸಂಸ್ಕೃತಿ ಚಿಂತಕ ಸಮಾಜವಾದಿ ಈಗ ನೆನಪು ಮಾತ್ರ. ಇತ್ತೀಚೆಗೆ ಶ್ರೀ ಸಂಜಯ ಇಂಡೆ ಅವರ ಮೂಲಕ ಬಸವ ತಿಳುವಳಿಕೆ ಮತ್ತು ತತ್ವಜ್ಞಾನದ ಒಂದು ದಿನದ ಕಾರ್ಯಾಗಾರವನ್ನು ಪುಣೆಯ ಗಾಂಧಿ ಭವನದಲ್ಲಿ ಮಾಡಲು ಅವರ ಮೂಲಕ ನನಗೆಸೂಚಿಸಿದ್ದರು. ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಶತಕದ ಸಾಧಕ ಪುಲಿಗೆರೆ ಸೋಮನಾಥ ಕನ್ನಡ ಸಾಹಿತ್ಯ ಪರಂಪರೆ ಕನ್ನಡ ಸಾಹಿತ್ಯ ಪರಂಪರೆಯು ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಸುದೀರ್ಘ ಇತಿಹಾಸವನ್ನು ಹೊಂದಿರುವ ಅತ್ಯಂತ ಶ್ರೀಮಂತ ಮತ್ತು ವೈವಿಧ್ಯಮಯವಾದ ಸಂಪ್ರದಾಯವಾಗಿದೆ. ಭಾರತದ ಅತ್ಯಂತ ಹಳೆಯ ಸಾಹಿತ್ಯ ಸಂಪ್ರದಾಯಗಳಲ್ಲಿ ಇದು ಮೂರನೇ ಸ್ಥಾನದಲ್ಲಿದ್ದು, ಇತಿಹಾಸದ ವಿವಿಧ ಕಾಲಘಟ್ಟಗಳಲ್ಲಿ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಚಳವಳಿಗಳೊಂದಿಗೆ ಬೆರೆತು ವಿಕಸನಗೊಂಡಿದೆ. ಕನ್ನಡ ಭಾಷೆ ಹಲ್ಮಡಿ ಶಾಸನದಲ್ಲಿ ಕಂಡು ಬಂದರೂ ಸಹಿತ ಅದಕ್ಕಿಂತ  ಮೂರು ಶತಮಾನಕ್ಕೂ ಅಧಿಕವಾದ ಪ್ರಾಚೀನ ಭಾರತೀಯ ದ್ರಾವಿಡ ಭಾಷೆಯಾಗಿದೆ. ಪೂರ್ವದ ಹಳಗನ್ನಡ ಮತ್ತು ಹಳಗನ್ನಡ ಕಾಲ (ಜೈನ ಯುಗ / ಪಂಪ ಯುಗ) ಕ್ರಿ.ಶ. ೫ ನೇ ಶತಮಾನದ ಹಲ್ಮಿಡಿ ಶಾಸನ ಕನ್ನಡದ ಅತ್ಯಂತ ಪ್ರಾಚೀನ ಲಿಖಿತ ದಾಖಲೆಯಾಗಿದೆ. ಕ್ರಿ.ಶ. ೮೫೦ ರ ಸುಮಾರಿನ ಅಮೋಘವರ್ಷ ನೃಪತುಂಗನ ‘ಕವಿರಾಜಮಾರ್ಗ’ ನಮಗೆ ದೊರೆತಿರುವ ಮೊದಲ ಸಾಹಿತ್ಯಿಕ ಗ್ರಂಥವಾಗಿದೆ. ಪಂಪ ಯುಗ: ೧೦ ನೇ ಶತಮಾನವನ್ನು ಕನ್ನಡ ಸಾಹಿತ್ಯದ ‘ಚಿನ್ನದ ಯುಗ’ ಎನ್ನಲಾಗುತ್ತದೆ. ರತ್ನತ್ರಯರು: ಆದಿಕವಿ ಪಂಪ (ವಿಕ್ರಮಾರ್ಜುನ ವಿಜಯ, ಆದಿಪುರಾಣ), ಪೊನ್ನ ಮತ್ತು ರನ್ನ ಕನ್ನಡದ ಮಹಾಕವಿಗಳಾಗಿದ್ದಾರೆ. ಶೈಲಿ: ಈ ಕಾಲದಲ್ಲಿ ‘ಚಂಪೂ’ (ಗದ್ಯ ಮತ್ತು ಪದ್ಯ ಮಿಶ್ರಿತ) ಶೈಲಿಯು ಪ್ರಸಿದ್ಧವಾಗಿತ್ತು. ೨. ನಡುಗನ್ನಡ ಕಾಲ (ವಚನ ಮತ್ತು ವೈಷ್ಣವ ಯುಗ) ೧೨ ನೇ ಶತಮಾನದಿಂದ ಕನ್ನಡ ಸಾಹಿತ್ಯವು ರಾಜಾಶ್ರಯದಿಂದ ಹೊರಬಂದು ಸಾಮಾನ್ಯ ಜನರ ಭಾಷೆಯಾಗಿ ಮಾರ್ಪಟ್ಟಿತು.ವಚನ ಸಾಹಿತ್ಯ: ೧೨ ನೇ ಶತಮಾನದ ಸಾಮಾಜಿಕ ಕ್ರಾಂತಿಯೊಂದಿಗೆ ವಚನ ಚಳವಳಿ ಆರಂಭವಾಯಿತು. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಮುಂತಾದ ವಚನಕಾರರು ಸರಳ ಕನ್ನಡದಲ್ಲಿ ಬದುಕಿನ ತತ್ವಗಳನ್ನು ಬರೆದರು. ಹರಿಹರ ಮತ್ತು ರಾಘವಾಂಕ: ಹರಿಹರನು ‘ರಗಳೆ’ ಸಾಹಿತ್ಯವನ್ನೂ, ರಾಘವಾಂಕನು ‘ಷಟ್ಪದಿ’ ಶೈಲಿಯನ್ನೂ ಪರಿಚಯಿಸಿದರು. ದಾಸ ಸಾಹಿತ್ಯ: ಭಕ್ತಿ ಪಂಥದ ಭಾಗವಾಗಿ ಪುರಂದರದಾಸರು, ಕನಕದಾಸರು ಮುಂತಾದ ಹರಿದಾಸರು ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು. ಕುಮಾರವ್ಯಾಸ: ‘ಕರ್ಣಾಟ ಭಾರತ ಕಥಾಮಂಜರಿ’ (ಗದಗಿನ ಭಾರತ) ಮಹಾಕಾವ್ಯದ ಮೂಲಕ ನಡುಗನ್ನಡದ ಶ್ರೇಷ್ಠ ಕವಿಯಾಗಿ ಹೊರಹೊಮ್ಮಿದನು. ಇಂತಹ ಸುದೀರ್ಘ ಸಾಹಿತ್ಯ ಪರಂಪರೆಯ ಶ್ರೇಷ್ಠ ಶತಕ ಸಾಧಕ ಪುಲಿಗೆರೆ ಸೋಮನಾಥ (ಪುಲಗೇರೆ ಸೋಮನಾಥ) ಕನ್ನಡ ಸಾಹಿತ್ಯ ಲೋಕದ ಒಬ್ಬ ಪ್ರಸಿದ್ಧ ಹಳಗನ್ನಡದ ಕವಿ.  ಇವರು ಪ್ರಮುಖವಾಗಿ ತಮ್ಮ ನೀತಿಪ್ರಧಾನ ಕಾವ್ಯವಾದ  ಸೋಮೇಶ್ವರ ಶತಕ’ಕ್ಕಾಗಿ ಜನಪ್ರಿಯರಾಗಿದ್ದಾರೆ.ಕವಿಯ ಕುರಿತಾದ ಪ್ರಮುಖ ವಿವರಗಳು  ವೈಯಕ್ತಿಕ ವಿವರಗಳು ಮತ್ತು ಕಾಲ ಇವರು ಸುಮಾರು ಕ್ರಿ.ಶ. ೧೨೯೯ ಅಥವಾ ೧೩ನೆಯ ಶತಮಾನದ ಉತ್ತರಾರ್ಧದಲ್ಲಿ ಬದುಕಿದ್ದರು ಎಂದು ಅಂದಾಜಿಸಲಾಗಿದೆ. ಇವರು ಹೊಯ್ಸಳ ರಾಜರ ಆಶ್ರಯದಲ್ಲಿದ್ದರು. ಜನ್ಮಸ್ಥಳ: ಇವರು ಪ್ರಸ್ತುತ ಗದಗ ಜಿಲ್ಲೆಯ (ಹಳೆಯ ಧಾರವಾಡ ಜಿಲ್ಲೆ) ಲಕ್ಷ್ಮೇಶ್ವರ ತಾಲೂಕಿನ ಪುಲಿಗೆರೆ (ಈಗಿನ ಲಕ್ಷ್ಮೇಶ್ವರ) ಎಂಬ ಊರಿನವರು.ಪಾಂಡಿತ್ಯ: ಸೋಮನಾಥನು ಕನ್ನಡ ಮತ್ತು ಸಂಸ್ಕೃತ ಎರಡೂ ಭಾಷೆಗಳಲ್ಲಿ ಮಹಾ ಪಂಡಿತನಾಗಿದ್ದನು. ಸಾಹಿತ್ಯ ಕೃಷಿ ಮತ್ತು ಅಂಕಿತ ನಾಮ ಇವರ ಪದ್ಯಗಳ ಅಂಕಿತ ನಾಮ “ಹರಹರಾ ಶ್ರೀ ಚೆನ್ನಸೋಮೇಶ್ವರಾ” ಅಥವಾ “ಹರಹರ ಶ್ರೀ ಚನ್ನಸೋಮೇಶ್ವರ”.ಸೋಮೇಶ್ವರ ಶತಕ: ಇದು ಇವರ ಅತ್ಯಂತ ಪ್ರಸಿದ್ಧ ಕೃತಿ.  ವೃತ್ತ ಛಂದಸ್ಸಿನಲ್ಲಿ (ಮತ್ತೇಭವಿಕ್ರೀಡಿತ ವೃತ್ತ) ರಚಿತವಾಗಿರುವ ಈ ಕಾವ್ಯವು ಒಟ್ಟು 100 ಪದ್ಯಗಳನ್ನು ಒಳಗೊಂಡಿದೆ. ಇವು ಸಮಾಜಕ್ಕೆ ಉತ್ತಮ ನೀತಿ, ಆದರ್ಶ ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸುತ್ತವೆ. ರತ್ನಾಕರಂಡಕ: ಇವರು ಚಂಪೂ ಶೈಲಿಯಲ್ಲಿ ‘ರತ್ನಾಕರಂಡಕ’ ಎಂಬ ಕಾವ್ಯವನ್ನೂ ರಚಿಸಿದ್ದಾರೆ. ಪ್ರಸಿದ್ಧ ಸಾಲುಗಳುಇವರ ಸೋಮೇಶ್ವರ ಶತಕದ ಈ ಸಾಲು ಕನ್ನಡ ನಾಡಿನಲ್ಲಿ ಅತ್ಯಂತ ಜನಪ್ರಿಯವಾಗಿದೆ:”ಕೆಲವಂ ಬಲ್ಲವರಿಂದ ಕಲ್ತು ಕೆಲವಂ ಶಾಸ್ತ್ರಂಗಳಂ ಕೇಳುತಂ…”(ಇದರ ಅರ್ಥ: ಮನುಷ್ಯನು ಸ್ವಲ್ಪ ಜ್ಞಾನವನ್ನು ತಿಳಿದವರಿಂದ ಕಲಿತು, ಇನ್ನು ಸ್ವಲ್ಪ ಜ್ಞಾನವನ್ನು ಶಾಸ್ತ್ರಗಳನ್ನು ಕೇಳಿ ಪಡೆಯುತ್ತಾ ಜ್ಞಾನಿಯಾಗಬೇಕು.) ಪುಲಿಗೆರೆ ಸೋಮನಾಥ ಮೂಲತಃ ಜೈನ ಧರ್ಮೀಯನಾಗಿದ್ದು ಶರಣರ ವಚನಗಳನ್ನು ಆಳವಾಗಿ ಓದಿಕೊಂಡು ನಡುಗನ್ನಡ ದೇಸಿ ಪದ್ಧತಿಯನ್ನು ತನ್ನ ಕಾವ್ಯ ಶೈಲಿಯನ್ನಾಗಿ ಪರಿವರ್ತಿಸಿದನು. ಬಸವಣ್ಣ ಅಕ್ಕ ಮಹಾದೇವಿ ಮತ್ತು ಇತರ ಶರಣರ ವಚನಗಳ ಪ್ರಭಾವ ಈತನ ಮೇಲೆ ಅಪಾರವಾಗಿ ಬೀರಿತ್ತು. ಇವನ ಶತಕಗಳು ಮುಂದೆ ಸರ್ವಜ್ಞ ಮತ್ತು ತತ್ವ ಪದಕಾರರಿಗೆ ಪ್ರಭಾವ ಬೀರಿರಬಹುದು ಎಂದೆನಿಸುತ್ತಿದೆ.ಒಟ್ಟಾರೆ ಸೋಮನಾಥನ ಶತಕಗಳು ಇಂದಿಗೂ ಕನ್ನಡ ಸಾಹಿತ್ಯ ಲೋಕದ ಅಪೂರ್ವ ಆಸ್ತಿ ಎಂದು ಹೇಳ ಬಹುದು ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣರ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ ಸಾವಿಲ್ಲದ ಶರಣರು ಲಿಂಗತತ್ವ ನಿಷ್ಠ. ಹಡಪದ ಅಪ್ಪಣ್ಣ ಸಂಗಮೇಶ್ವರ ಅಪ್ಪಣ್ಣ ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಕಾಲ – ಹನ್ನೆರಡನೆಯ ಶತಮಾನ ಬಸವ ಸಮಕಾಲೀನ ಶರಣಒಟ್ಟು ವಚನಗಳು – 102 +250=352ಅಂಕಿತ: ಬಸವಪ್ರಿಯ ಕೂಡಲ ಚೆನ್ನಸಂಗಮದೇವ ,/ ಬಸವ ಪ್ರಿಯ ಚೆನ್ನಬಸವಣ್ಣ ಊರು- ಕೂಡಲ ಸಂಗಮ ,ಮುಸುಬಿನಾಳ ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನಕಾರರು ಮತ್ತು ಬಸವಣ್ಣನವರ ಆಪ್ತ ಕಾರ್ಯದರ್ಶಿ. ಇವರು ಬಸವಣ್ಣನವರ ಬಲಗೈ ಬಂಟರೆಂದು ಪ್ರಸಿದ್ಧರು. ‘ಅನುಭವ ಮಂಟಪದಲ್ಲಿ’ ಪ್ರಮುಖ ಪಾತ್ರ ವಹಿಸಿದ್ದರು. ಇವರು ‘ಬಸವಪ್ರಿಯ ಕೂಡಲ ಚೆನ್ನಬಸವಣ್ಣ’ ಎಂಬ ಅಂಕಿತನಾಮದಲ್ಲಿ 250ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ. ಇವರ ಪತ್ನಿ ಲಿಂಗಮ್ಮನವರು ಕೂಡ ವಚನಗಾರ್ತಿಯಾಗಿದ್ದರು        ಅಪ್ಪಣ್ಣನ  ಹೆಸರಿನ ಹಿಂದೆ ಸೇರಿದ ‘ಸಂಗಮೇಶ್ವರ’ (ಕೂಡಲಸಂಗಮ) ಈತನ ಸ್ಥಳವಾಗಿರಬೇಕು. ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ಬೋಧೆ ಕಾಯಕ ದಾಸೋಹದ ಮಹತ್ವ ಮುಂತಾದ ಅನೇಕ ವಿಷಯಗಳ ಮೇಲೆ ಭಿನ್ನ ಚಿಂತನೆ ನಡೆಸಿದವರು.   ಎಲ್ಲವೂ ತಾತ್ವಿಕವಾಗಿವೆ. ಅನ್ಯಮತ ಖಂಡನೆ, ಶಿವಪಾರಮ್ಯ ಸ್ಥಾಪನೆಗೆ ವಿಶೇಷ ಸ್ಥಾನ ಸಂದಿದೆ. ಶರಣಸ್ತುತಿ, ಶೂನ್ಯಸಿಂಹಾಸನ, ಅನುಭವ ಮಂಟಪಗಳ ಉಲ್ಲೇಖ, ಪ್ರಭುದೇವರು ಕಲ್ಯಾಣಕ್ಕೆ ಬಂದ ಪ್ರಸಂಗ ಮತ್ತು ಆರೋಗಣೆ ನಡೆಸಿದ ಸಂದರ್ಭಗಳನ್ನು ಪ್ರಸ್ತಾಪಿಸುವುದು ಮಹತ್ವದ ಅಂಶಗಳೆನಿಸಿವೆ. ತುಂಬ ದೀರ್ಘವಾಗಿದ್ದು ಗದ್ಯಲಕ್ಷಣವನ್ನು ಹೊಂದಿದ ರಚನೆಗಳ ಜೊತೆಗೆ ಮುಕ್ತಕ ರೂಪದ ವಚನಗಳೂ ಸಮಾವೇಶಗೊಂಡಿವೆ.   ಲಿಂಗತತ್ವ  ಸಂಗಮೇಶ್ವರ ಅಪ್ಪಣ್ಣನಿಗೆ ಅಪಾರವಾಗಿದೆ. ತರ್ಕ ಶಕ್ತಿ ಅಗಾಧವಾಗಿದೆ. ಲಿಂಗಾಯತ ತತ್ತ್ವ ಪ್ರತಿಪಾದನೆ ವಿಶೇಷವಾಗಿ ಕಂಡು ಬರುತ್ತದೆ. ಶಿವಪಾರಮ್ಯ, ಅನ್ಯಮತ ಖಂಡನೆ, ಬ್ರಾಹ್ಮಣರ ಕರ್ಮಠತನದ ಖಂಡನೆ, ಅಷ್ಟಾವರಣ, ಪಂಚಾಚಾರಗಳ ವಿವರಣೆ ಇವನ ವಚನಗಳಲ್ಲಿ ಬಂದಿದೆ. ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ   ಇತ್ತೀಚಿನ ನನ್ನ ಅಧ್ಯಯನ ಮತ್ತು ಸಂಶೋಧನೆಯಿಂದ ನಾನು ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಎಂದು ಖಚಿತ ಪಡಿಸಲು ಇಚ್ಛಿಸುತ್ತೇನೆ . ಇದಕ್ಕೆ ಕೆಲ ಪುರಾವೆಗಳನ್ನೂ ಇಲ್ಲಿ ನೀಡುತ್ತಿದ್ದೇನೆ. 1 ವಚನಾಂಕಿತ –  ಬಸವಪ್ರಿಯ ಕೂಡಲ ಚೆನ್ನಸಂಗಮದೇವ -ಈ ವಚನಾಂಕಿತ ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣನವರ ವಚನಾಂಕಿತವಾಗಿದ್ದು ಇಬ್ಬರೂ ಒಬ್ಬರೇ ಎನ್ನುವ ನಿರ್ಧಾರ ಬಲವಾಗುತ್ತದೆ. 2 ಇಬ್ಬರ ವಚನಗಳಲ್ಲಿ -ಲಿಂಗ ತತ್ವ ಷಟಸ್ಥಲ, ಸಿದ್ಧಾಂತ ಅಪಾರವಾಗಿ ಕಂಡು ಬರುತ್ತದೆ. ವಚನ ರಚನಾ ಕೌಶಲ್ಯ,ಭಾವ,ಚಿಂತನೆಗಳು ಒಂದೇ ರೀತಿಯಾಗಿ ಕಂಡು ಬರುತ್ತವೆ.3 ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರ ಅಪ್ಪಣನವರ ವಚನಗಳಲ್ಲಿ ತಮ್ಮ ಬಸವಣ್ಣನವರ ಸಂಬಂಧವು ಎದ್ದು ಕಾಣುತ್ತದೆ,ಹೀಗಾಗಿ ಇಬ್ಬರೂ ಬೇರೆ ಬೇರೆ ಅಲ್ಲ ಒಬ್ಬರೇ ಎಂದು ನಿರ್ಧರಿಸಬಹುದು. 3 ಹಡಪದ ಅಪ್ಪಣ್ಣ ಬಾಗೇವಾಡಿಯ ಹತ್ತಿರದ ಮುಸುಬಿನಾಳ ಗ್ರಾಮದವನು, ಅವನ ಹೆಂಡತಿ ಲಿಂಗಮ್ಮ ಅದೇ ಊರಿನ ಹೂಗಾರ ನಾಗಪ್ಪನ ಮಗಳು ಎಂದು ಇತ್ತೀಚಿನ ಅಧ್ಯಯನ ಮತ್ತು ಸಂಶೋಧನೆಯಿಂದ ತಿಳಿದು ಬರುತ್ತದೆ. ಬಾಲಕ ಬಸವಣ್ಣ ಬಾಗೇವಾಡಿ ಅಗ್ರಹಾರದ ವಿರುದ್ಧ ಬಂಡೆದ್ದು ಮನೆ ಬಿಟ್ಟು ಹೋಗುವಾಗ ಅಕ್ಕ ಅಕ್ಕನಾಗಮ್ಮ  ಪತಿ ಶಿವಸ್ವಾಮಿ ಜೊತೆಗೆ ಹಿರಿಯ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಅವರ ಜೊತೆಗೆ ಕೂಡಲ ಸಂಗಮಕ್ಕೆ ಹೋಗಿರಬಹುದು , ಹನ್ನೆರಡು ವರುಷ ಕೂಡಲ ಸಂಗಮ್ಮದಲ್ಲಿ ಇದ್ದು ತನ್ನ ಕಾಯಕ ಮಾಡುತ್ತಾ ಬಸವಣ್ಣನವರ ಅಧ್ಯಯನಕ್ಕೆ ಸಹಾಯ ಮಾಡುತ್ತ ಮುಂದೆ ಮಂಗಳವೆಡೆಗೆ ಹೋಗಿ ಬಸವಣ್ಣನವರ ನೆರಳಂತೆ ನಿಂತದ್ದು ಸ್ಪಷ್ಟವಾಗಿ ಕಂಡು ಬರುತ್ತದೆ. 4 ಮಾದಲಾಂಬಿಕೆಯ ತಾಯಿಯ ತವರು ಮನೆ ಕೂಡಲಸಂಗಮವಾಗಿದ್ದು  ಬಾಗೇವಾಡಿ ಅಗ್ರಹಾರ ತೊರೆದ ಬಸವಣ್ಣನಿಗೆ ಆಶ್ರಯಕ್ಕೆ ಬಂದಿದ್ದು ಮಾದಲಾಂಬಿಕೆಯ ತಾಯಿಯ ತವರು ಮನೆ ಕೂಡಲ ಸಂಗಮ, ಸಹೋದರ ಮಾವ ಬಲದೇವನು ಸಹಾಯ ಮಾಡಿದ್ದೂ ಗಮನಾರ್ಹ, ಇದನ್ನು ಜಾನಪದ ಕವಿಗಳು ಹೇಳುತ್ತಾರೆ. 5 ಬಹಳ ವರ್ಷಗಳವರೆಗೆ ಹಡಪದ ಅಪ್ಪಣ್ಣ ಕೂಡಲ ಸಂಗಮದಲ್ಲಿ ಇದ್ದ ಕಾರಣ ಅವನನ್ನು ಕಲ್ಯಾಣದ ಶರಣರು  ಆರಂಭದಲ್ಲಿ ಸಂಗಮೇಶ್ವರ ಅಪ್ಪಣ್ಣ ಎಂದು ಕರೆದಿರಬಹುದು, ಮುಂದೆ  ಅಪ್ಪಣ್ಣ ಕಲ್ಯಾಣಕ್ಕೆ ಬಂದ ಮೇಲೆ ಬಸವಣ್ಣನವರ ಆಪ್ತ  ಕಾರ್ಯದರ್ಶಿಯಾಗಿ ನೇಮಕ ಗೊಂಡ ಮೇಲೆ ಆಡಳಿತದ ಆಸ್ಥಾನದ ಕಡತಗಳನ್ನು,ಕಚೇರಿ ಪತ್ರಗಳನ್ನು,ಮಂತ್ರಿಯ ಆದೇಶಗಳನ್ನು ಇಡಲು ಅಡಪ ( ಕಟ್ಟಿಗೆಯ ಡಬ್ಬಿ) ತನ್ನೊಂದಿಗೆ ಇಡುತ್ತಿದ್ದನು.    ಕಲ್ಯಾಣಕ್ರಾಂತಿಯಲ್ಲಿ ಹಡಪದ ಅಪ್ಪಣ್ಣನವರ ಪಾತ್ರ ಬಲು ದೊಡ್ಡದು, ಬಸವಣ್ಣನವರ ಯೋಜನೆ ಚಿಂತನಾಕ್ರಮದಲ್ಲಿ ಪಾಲ್ಗೊಂಡ ವೈಚಾರಿಕ ಶರಣ, ಬಸವಣ್ಣನವರ ಆಸೆಯಂತೆ ಹಡಪದ ಅಪ್ಪಣ್ಣನವರು ನೀಲಾಂಬಿಕೆಯನ್ನು ಕೂಡಲ ಸಂಗಮಕ್ಕೆ ಕರೆ ತರಲು ಹೇಳಿದಾಗ, ಅವರ ಆದೇಶದಂತೆ ಅಪ್ಪಣ್ಣನವರು ನೀಲಮ್ಮನನ್ನು ಕರೆದುಕೊಂಡು ಬರುವಾಗ ತಂಗಡಗಿಗೆ ಬಂದಾಗ ಬಸವಣ್ಣನವರ ಸಾವಿನ ಸುದ್ಧಿ ಕೇಳಿ ಬರುತ್ತದೆ, ಆಗ ನೀಲಮ್ಮ ಮತ್ತು ಅಪ್ಪಣ್ಣನವರು ಅಲ್ಲಿಯೇ ಐಕ್ಯವಾಗಿದ್ದು ನದಿಯ ದಡದಲ್ಲಿ ಇಬ್ಬರ ಸಮಾಧಿಯ ಕುರುಹು ಸ್ಮಾರಕಗಳು ಕಂಡು ಬರುತ್ತವೆ.             ಸಂಗಮೇಶ ಅಪ್ಪಣ್ಣನವರ ಕೆಲ  ವಚನಗಳಅಂಗ ಲಿಂಗವೆಂದರಿದಾತಂಗೆ, ಅಂಗದಲೆ ಐಕ್ಯ.ಕಂಗಳು ಲಿಂಗವೆಂದರಿದಾತಂಗೆ, ಕಂಗಳಲೆ ಐಕ್ಯ.ಕರವೆ ಲಿಂಗವೆಂದರಿದಾತಂಗೆ, ಕರದಲೆ ಐಕ್ಯ.ಈ ತ್ರಿವಿಧದ ನೆಲೆಯ, ಶ್ರುತಿ ಸ್ಮೃತಿಗಳರಿಯವು.ಎಮ್ಮ ಬಸವಪ್ರಿಯ ಕೂಡಲಚನ್ನಸಂಗಮದೇವನಲ್ಲಿಈ ಇರವ ಶರಣರೆ ಬಲ್ಲರು./1 ಅಂಗದ ಕಳೆ ಲಿಂಗದಲ್ಲಿ ಲೀಯವಾಗದು.ಲಿಂಗದ ಕಳೆ ಅಂಗದಲ್ಲಿ ಲೀಯವಾಗದು.ಮಾತಿನಮಾಲೆಯ ಬೊಮ್ಮವೇತರದೊ ?ಕಾಯ ಭಕ್ತನಾದರೆ ಭೃತ್ಯಾಚಾರವಿರಬೇಕು.ಪ್ರಾಣ ಜಂಗಮವಾದಡೆ ಅರಿದಿರಬೇಕು.ಇಂತು ಭಕ್ತಿಜ್ಞಾನವುಳ್ಳವರಲ್ಲದೆ ಭಕ್ತರಲ್ಲ, ಶರಣರಲ್ಲ.ಹಿರಿಯರು ಬಂದಡೆ ಇದಿರೆದ್ದು ಬಾರದವರ ಮನೆಗೆ ಅಡಿಯ ಇಡೆವೆಂದು,ಬಸವಪ್ರಿಯ ಕೂಡಲಚನ್ನಸಂಗನ ಶರಣರು ಕಾಡಿಹರು ಕಾಣಾ,ಸಂಗನಬಸವಣ್ಣಾ./2 ಅಂದಂದಿಗೆ ನೂರು ತುಂಬಿತ್ತೆಂಬ ದಿಟವಿರಬೇಕು.ಸಂದ ಪುರಾತನರ ನೆನೆಯುತ್ತಿರಬೇಕು.ಜಂಗಮ ಮಠಕ್ಕೆ ಬಂದಡೆ, ವಂಚನೆಯಿಲ್ಲದೆ ಮಾಡಬೇಕು.ಎನಗಿದೇ ವರವನೀವುದು, ಬಸವಪ್ರಿಯ ಕೂಡಲಚನ್ನಸಂಗಮದೇವಾ./4 ಅಗ್ಗದ ಹರಿಬ್ರಹ್ಮರ ಮರೆದೊಮ್ಮೆ ಹರಂಗೆ ಸಮವೆಂದಡೆ,ಅವನು ಚಾಂಡಾಲನು. ಅವನ ಮುಖವ ನೋಡಲಾಗದು.ಅದೆಂತೆಂದಡೆ: ಯೋ ಮಹಾದೇವಮನ್ಯೇನ ಹೀನದೇವೇನ ದುರ್ಮತಿಃ |ಸಕೃತ್ಸಾಧಾರಣಂ ಬ್ರೂಯಾದಂತ್ಯಜಾನಾಂತ್ಯಜೋಂತಜಃ ||ಇಂತೆಂದುದಾಗಿ, ನಿಮಗೆ ಕಿರುಕುಳದೈವಂಗಳ ಸಮವೆಂದುಬಗಳುವನ ಬಾಯಿ ಪಾಕುಳತಪ್ಪದು,ಬಸವಪ್ರಿಯ ಕೂಡಲಚನ್ನಸಂಗಮದೇವಾ./5 ಅಜಹರಿಸುರರೆಲ್ಲರು ಅಳಿದವರಲ್ಲದೆ, ಉಳಿದವರಿಲ್ಲ.ಶಿವನೆ ನಿತ್ಯನೆಂದು ಹೊಡೆವಡುತ್ತಿವೆ ವೇದ.ಉತೈನಂ ವಿಶ್ವಾಭೂತಾನಿ ಸದೃಷ್ಟೋ ಮೃಡಯಾತಿನಃ |ನಮೋಸ್ತು ನೀಲಗ್ರೀವಾಯ ಸಹಸ್ರಾಕ್ಷಾಯ ಮೀಡುಷೇ ||ಎಂಬ ಶ್ರುತಿ, ಬಸವಪ್ರಿಯ ಕೂಡಲಚನ್ನಸಂಗಯ್ಯನೊರ್ವನೆನಿತ್ಯನೆಂದು ಹೊಗಳುತ್ತಲಿದೆ./7 ಅನಿಮಿಷನಾದ ನಿಬ್ಬೆರಗಿನ ಲಿಂಗೈಕ್ಯನು, ಭಾವ ನಿರ್ಭಾವವನೆಯ್ದಿ,ಜ್ಞಾನವೆ ಪರಮಾಶ್ರಯವಾಗಿಪ್ಪ ಲಿಂಗೈಕ್ಯನು,ಮಹವನೊಳಕೊಂಡ ಮಹಿಮ ಲಿಂಗೈಕ್ಯನು,ಬಸವಪ್ರಿಯ ಕೂಡಲ ಚನ್ನಸಂಗಯ್ಯಾ ನಿಮ್ಮ ಶರಣ ಪ್ರಭುದೇವರು./9 ಅನೇಕ ಪರಿಯ ಭಕ್ತಿಯ ವೇಷವನಳವಡಿಸಿಕೊಂಡು,ಮನೆಮನೆದಪ್ಪದೆ ತಿರುಗುವೆನು.ಅವರ ಇಚ್ಛಿಗೆ ಅನುಮಾನವಿಡಿದು ನುಡಿವೆನು.ಅವರ ಮನಧರ್ಮವನರಿಯದೆ ನುಡಿದೆನಾದಡೆ,ಅನೇಕ ಪರಿಯಲ್ಲಿ ಭಂಗಬಡುವೆನು.ದಿಟದ ಭಕುತನಂತೆ,ಪುರಾತರ ವಚನಂಗಳ ಉದರ ನಿಮಿತ್ತವಾಗಿ ಬಳಸುವೆನು.[ಕಡು] ಪಾಪಿಗಿನ್ನೇನು ಹದನಯ್ಯ,ಬಸವಪ್ರಿಯ ಕೂಡಲಚೆನ್ನ ಸಂಗಮದೇವಾ ?/10 ಅಯ್ಯಾ ಎನ್ನ ಹಲ್ಲ ಮರೆಯಲ್ಲಿಪ್ಪ ಬೆಲ್ಲವ ಕಂಡು, ಎಲ್ಲರೂ ಮೆಲಬಂದರು.ಬೆಲ್ಲಗಳಿದ್ದಡೆ ನಿಲಲೀಸದೆ ಎನ್ನ ಕಾಡುತ್ತಿದಾರೆಯೆಂದು,ಆ ಬೆಲ್ಲವನಲ್ಲಿಯೆ ನುಂಗಿದಡೆ, ಹಲ್ಲು ಮುರಿದವು.ಮೆಲಬಂದವರೆಲ್ಲ ಅಲ್ಲಿಯೆ ಬಯಲಾದರು.ನಾ ನಿಮ್ಮಲ್ಲಿ ಕೂಡಿ ಸುಖಿಯಾದೆನಯ್ಯಾ,ಬಸವಪ್ರಿಯ ಕೂಡಲಚೆನ್ನಸಂಗಮದೇವಾ./11 ಅಯ್ಯಾ ಮರದೊಳಗಣ ಕಿಚ್ಚು ಮರನ ಸುಡುತ್ತಿದ್ದಿತ್ತಯ್ಯಾ.ಮರ ಬೆಂದು ನಿಂದುರಿಯಿತ್ತು , ಮಣ್ಣು ಜರಿದು ಬಿದ್ದಿತ್ತು.ಉರಿ ಹೊಗೆ ನಂದಿತ್ತು , ಸ್ವಯಂಪ್ರಕಾಶವಾಗಿಪ್ಪ ಉರಿ ಉಳಿಯಿತ್ತು.ಆ ಉರಿ ಬಂದು ಎನ್ನ ಕರಸ್ಥಲದಲ್ಲಡಗಿತ್ತು .ಇದ ಕಂಡು, ನಾ ಬೆರಗಾಗಿ ನೋಡುತ್ತಿದ್ದೆನಯ್ಯಾ,ಬಸವಪ್ರಿಯ ಕೂಡಲಚೆನ್ನ ಸಂಗಮದೇವಾ./12 ಅಲ್ಲಿಂದತ್ತ ಪಶ್ಚಿಮಚಕ್ರಕ್ಕೆ ಏಕದಳ ಪದ್ಮ,ಹವಣಿಸಬಾರದ ತೇಜ, ಏಕಾಕ್ಷರ,ಕುರುಹಿಡಬಾರದ ನಾದ, ಅಪ್ರದರ್ಶನ ವರ್ಣ,ನಿಭರ್ಿನ್ನ ಶಕ್ತಿ, ಸರ್ವಾತ್ಮನೆಂಬ ಜಂಗಮವೆ ಅಧಿದೇವತೆ.ಪರಿಪೂರ್ಣ ಜಂಗಮಲಿಂಗ, ಅಕ್ಷರಾಕ್ಷ[ರ]ತೀತ, ನಿಶ್ಶಬವಾಗಿಪ್ಪುದು.ಇಂತಪ್ಪ ಲಿಂಗಾಂಗವೆ ತಾನಾಗಿ, ಅವಿರಳ ಜಂಗಮಭಕ್ತಿಯ ಮಾಡಬಲ್ಲಾತನೆ,ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿಸಂಗನಬಸವಣ್ಣನಯ್ಯಾ, ಪ್ರಭುವೆ./16 ಎನ್ನ ತನು ನಿಮ್ಮ ಸೇವೆಯಲ್ಲಿ ಸವೆದು,ಎನ್ನ ಮನ ನಿಮ್ಮ ನೆನಹಿನಲ್ಲಿ ಸವೆದು,ಎನ್ನರಿವು ನಿಮ್ಮ ಘನದೊಳಗೆ ಸವೆದು, ನಿಶ್ಚಲ ನಿಜೈಕ್ಯವಾಗಿ,ಬಸವಪ್ರಿಯ ಕೂಡಲಚೆನ್ನಸಂಗಯ್ಯಾ,ನೀ ನಾನೆಂಬುದೇನಾಯಿತ್ತೆಂದರಿಯೆನು./24 ಹಡಪದ ಅಪ್ಪಣ್ಣನವರ ಕೆಲ ವಚನಗಳು ಅಂಗ ಲಿಂಗವಾಯಿತ್ತೆಂಬಿರಿ, ಲಿಂಗ ಅಂಗವಾಯಿತ್ತೆಂಬಿರಿ.ಅಂಗ ಲಿಂಗ ಸಂಬಂಧ ಎಲ್ಲರಿಗೆ ಎಂತಾಯಿತ್ತು ಹೇಳಿರಣ್ಣಾ.ಅಂಗ ಲಿಂಗ ಸಂಬಂಧವಾದರೆ, ಗುರುವಿನಲ್ಲಿ ಗುಡ್ಡನಾಗಿರಬೇಕು,ಲಿಂಗದಲ್ಲಿ ನಿಷ್ಠನಾಗಿರಬೇಕು, ಜಂಗಮದಲ್ಲಿ ಅವಧಾನಿಯಾಗಿರಬೇಕು.ಇವ ಮೂರರಲ್ಲಿ ದೂರಾಗಿಪ್ಪರ ಎನಗೊಮ್ಮೆ ತೋರದಿರಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ಕರವನರಿದಂಗೆ ಕಮಲದ ಹಂಗೇಕೊ?ಇರವನರಿದಂಗೆ ಪರದ ಹಂಗೇಕೊ ?ಪರವನರಿದಂಗೆ ಇರವದ ಹಂಗೇಕೊ?ಇಹ ಪರವೆಂಬ ಉಭಯವಳಿದ ಶರಣಂಗೆಮರ್ತ್ಯದ ನರರ ಹಂಗೇಕೊ ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ? ಮನವನರಿದಂಗೆ ಮತದ ಹಂಗೇಕೊ ?ನಿತ್ಯವನರಿದಂಗೆ ತೀರ್ಥದ ಹಂಗೇಕೊ ?ಪರಮಾರ್ಥವನರಿದಂಗೆ ಪ್ರಸಾದದ ಹಂಗೇಕೊ ?ಜ್ಯೋತಿಯನರಿದಂಗೆ ಕತ್ತಲೆಯ ಹಂಗೇಕೊ?ಲೋಕವನರಿದಂಗೆ ವ್ಯಾಕುಲದ ಹಂಗೇಕೊ?ಈ ತೆರನನರಿದಂಗೆ ಮುಂದಾವ ಭೀತಿಯುಂಟು ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?  ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರ ಅಪ್ಪನವರ ವಚನಗಳಲ್ಲಿ ಸಾಮ್ಯತೆಯಿದೆ . ಬಹುತೇಕ ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ತಾತ್ವಿಕ ಚಿಂತೆಗಳಲ್ಲಿ ಸಾಮ್ಯತೆ ಎದ್ದು ಕಾಣುತ್ತದೆ.  ಹೀಗಾಗಿ ಇವರಿಬ್ಬರೂ ಒಬ್ಬರೇ ಎನ್ನುವ ತೀರ್ಮಾನಕ್ಕೆ ಬರಲಾಗುವುದು.   ಹಡಪದ ಅಪ್ಪಣ್ಣ ಕ್ಷೌರಿಕ ವೃತ್ತಿಯವನೇ  ? ಹೀಗಾಗಿ ಅಡಪ  ಜನಬಳಕೆಯಲ್ಲಿ ಹಡಪ ಆಗಿದೆ ಅಡಪವನ್ನು ಇಟ್ಟುಕೊಂಡವ  ಅಡಪದವ ಅಥವಾ ಹಡಪದ  ಎಂದು ಬಂದಿದೆ.ಕಲ್ಯಾಣದ  ಚಾಲುಕ್ಯರ ಕಳಚೂರ್ಯರ ರಾಜ್ಯದ ವಿಸ್ತಾರ ಎಷ್ಟಿತ್ತಂದರೆ ಛಪ್ಪನ್ನೈವತ್ತಾರು ರಾಜ್ಯಗಳಿದ್ದವು ಎಂದು ಬಸವಣ್ಣನವರ ವಚನವೊಂದರಲ್ಲಿ ಕಾಣಬಹುದು. ಮಹಾರಾಷ್ಟ್ರದ ಮಂಗಳವೆಡೆ, ಉದ್ಗೀರ, ಲಾತೂರ, ಸೋಲಾಪುರ,  ತುಳಜಾಪುರ,  ಪಂಡರಾಪುರ ಜತ್ತ ಅಕ್ಕಲಕೋಟ ಮುಂತಾದ ಪ್ರದೇಶಗಳ  ಭೂ ಪ್ರದೇಶವು ಆಂಧ್ರ ವೆಂಗಿಪಳು ಕರ್ನಾಟಕ ಮುಂತಾದ ಪ್ರದೇಶಗಳನ್ನು  ಮುಂತಾದ ಕಡೆಗಳಲ್ಲಿ ಚಾಲುಕ್ಯ ರಾಜ್ಯರ ಆಡಳಿತದ ಶಿಲ್ಪ ಕಲೆ ಶಾಸನಗಳು ಮತ್ತು ಗುಡಿ ಗೋಪುರಗಳ ಶೈಲಿ ಚಾಲುಕ್ಯರದ್ದಾಗಿತ್ತು.       ಬಿಜ್ಜಳನೂ ಕ್ಷೌರಿಕ ಕುಲದ ಶೈವನೆಂದು ಕೆಲ ಸಂಶೋಧಕರು ತಮ್ಮ ಅಭಿಮತ ವ್ಯಕ್ತ ಪಡಿಸಿದ್ದಾರೆ. ಹಡಪದ ಅಪ್ಪಣ್ಣ ಅವನ ಹೆಂಡತಿ ಮುಸುಬಿನಾಳ ಹೂಗಾರ ನಾಗಪ್ಪನ ಮಗಳು ಲಿಂಗಮ್ಮ ಎಂದು ತಿಳಿದು ಬರುತ್ತದೆ.    ಬಸವಣ್ಣ ಬಿಜ್ಜಳನ ಪ್ರಧಾನಿ ಅರ್ಥ ಸಚಿವ ದಂಡನಾಯಕನಾಗಿದ್ದನು ಇವರ ಆಪ್ತ ಕಾರ್ಯದರ್ಶಿಯಾಗಿ ಹಡಪದ ಅಪ್ಪಣ್ಣ ಕಲ್ಯಾಣದಲ್ಲಿ ಕ್ಷೌರಿಕ ವೃತ್ತಿಯನ್ನು ಕೈಗೊಂಡಿದ್ದನು ಎಂದೆನ್ನುವುದು ನನ್ನ ದೃಷ್ಟಿಯಲ್ಲಿ ಸರಿ ಅನಿಸುವುದಿಲ್ಲ. ರಾಜ್ಯಾಡಳಿತ ದಾಖಲೆಗಳು ಕಾಗದ ಪಾತ್ರಗಳು ಬೇರೆ ಬೇರೆ ರಾಜರ ಸಾಮಂತರ ಒಲೆಗಳು ಮುಂತಾದ ಅನೇಕ ಮಹತ್ತರ ದಾಖಲೆಗಳನ್ನು ಸಂಗ್ರಹಿಸಿ ಇಡಲು ಕಟ್ಟಿಗೆಯಿಂದ ಮಾಡಿದೆ ಒಂದು ಡಬ್ಬಿ ಅದಕ್ಕೆ ಈಗಲೂ ಅಡಪ ಎಂದು ಉತ್ತರ ಕರ್ನಾಟಕದಲ್ಲಿ ಕರೆಯುತ್ತಾರೆ.  ಮಹಾ ಮನೆಯಲ್ಲಿ ಪ್ರಸಾದವಾದ ಮೇಲೆ  ತಾಂಬೂಲ ವಿತರಿಸುವ ರೇಚಣ್ಣನೂ ಅಡಪವನ್ನು ಹೊಂದಿದ್ದನ್ನು . ಅಡಪವನ್ನು ಹೊಂದಿದವ ಅಡಪದವ ಅಥವಾ ಹಡಪದ ಎಂಬ ತಪ್ಪು ಉಚ್ಚಾರಣೆಯಿಂದಾಗಿ ಹಡಪದ ಎಂದು ಹೆಸರು ಬಂತು.  ಕ್ಷೌರಿಕ ಕಾರ್ಯವನ್ನು ಮಾಡುವವರು ಈಗಲೂ ಕೂಡ ಹಳ್ಳಿಯಲ್ಲಿ ಅಡಪವನ್ನು ಇಟ್ಟುಕೊಂಡು ಮನೆ ಮನೆಗೆ ಹೋಗಿ ಕ್ಷೌರಿಕ ಸೇವೆ ಮಾಡುತ್ತಾರೆ. ಹಡಪದ ಅಪ್ಪಣ್ಣನವರು ಕ್ಷೌರಿಕ ಕುಲದಲ್ಲಿ ಹುಟ್ಟಿದರೂ ಸಹಿತ ಅವರು ಪ್ರಧಾನಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ಮಾಡಿದರು ಎಂದು ತಿಳಿದು ಬರುತ್ತದೆ.     ಚೆನ್ನಬಸವಣ್ಣನವರ ಮೇಲೆ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮರ  ಪ್ರಭಾವ  ಬಸವಣ್ಣನವರು ಬಾಗೇವಾಡಿ ಅಗ್ರಹಾರವನ್ನು ಬಿಟ್ಟು ಕೂಡಲ ಸಂಗಮಕ್ಕೆ ಹೋಗುವಾಗ ಅಕ್ಕನಾಗಮ್ಮ ಮತ್ತು ಅವಳ ಪತಿ ಶಿವಸ್ವಾಮಿಗಳ ಜೊತೆಗೆ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮನವರೂ ಹೋಗಿದ್ದರು. ಹಡಪದ ಅಪ್ಪಣ್ಣ ಕೂದಲ ಸಂಗಮ್ಮದಲ್ಲಿ ಮಾದಲಾಂಬಿಕೆಯ ತವರು ಮನೆಯಲ್ಲಿ ಕೃಷಿ ಮಾಡುತ್ತಿರಬಹುದು ಅಥವಾ ಬಸವಣ್ಣನವರು ತಮ್ಮ ಶಿಕ್ಷಣವನ್ನು  12 ವರುಷ  ಕೂಡಲ ಸಂಗಮದಲ್ಲಿ ಮಾಡುತ್ತಿರುವಾಗ  ಕ್ಷೌರಿಕ ವೃತ್ತಿಯನ್ನು ಮಾಡುತ್ತಿರಬಹುದು. ಬಲದೇವರ ಆಮಂತ್ರಣದ ಮೇರೆಗೆ ಬಸವಣ್ಣ ಅಕ್ಕನಾಗಮ್ಮ ಬಾಲಕ ಚೆನ್ನಬಸವಣ್ಣ ಮತ್ತು ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಮಂಗಳವೇಡೆಗೆ ಹೋದರು.          ಹಡಪದ  ಅಪ್ಪಣ್ಣ ಮತ್ತು ಲಿಂಗಮ್ಮ

Read Post »

ಸಾವಿಲ್ಲದ ಶರಣರು

ಶರಣ ಸಂಗಾತಿ ಸಾವಿಲ್ಲದ ಶರಣರು ಶಶಿಕಾಂತ್‌ ಪಟ್ಟಣ ರಾಮದುರ್ಗ ಷಟ್ಪದಿಯ ಕವಿ ರಾಘವಾಂಕ ರಾಘವಾಂಕನು ಹರಿಹರನ ಸೋದರಳಿಯ ಮತ್ತು ಶಿಷ್ಯ ತನ್ನ ಸಾಹಿತ್ಯ ರಚನೆಯ ಆರಂಭದಲ್ಲಿ ರಾಘವಾಂಕನು ಕೇವಲ ವೈಷ್ಣವ ಪರಂಪರೆಯ ಕಾವ್ಯಗಳನ್ನು ರಚಿಸಿದನೆಂದು ಮತ್ತು ತನ್ನ ಗುರು ಮತ್ತು ಸೋದರ ಮಾವನಿಗೆ ಆ ಪುರಾಣಗಳನ್ನು ತೋರಿಸಿದಾಗ ಸಿಟ್ಟಿಗೆದ್ದ  ಹರಿಹರ  ತನ್ನ ಶಿಷ್ಯ ಮತ್ತು ಸೋದರಳಿಯನಿಗೆ ಬಾಯಿಯ ಮೇಲೆ ಬಡಿದನೆಂದು  ಆಗ ಐದು ಹಲ್ಲುಗಳು ಉದರಿದವೆಂದು  ಮುಂದೆ ನೀನು ಶರಣರ ಜೀವನಾಧಾರಿತ ಕೃತಿಗಳನ್ನು ಬರೆಯಬೇಕು ಅಂದರೆ ಮಾತ್ರ ನಿನಗೆ ಉದುರಿ ಹೋದ ಹಲ್ಲುಗಳು ಮರಳಿ ಬರುತ್ತವೆ ಎಂದು ಆಜ್ಞಾಪಿಸಿದನಂತೆ.  ಆಗ  ರಾಘವಾಂಕ 1ಸಿದ್ಧರಾಮ ಪುರಾಣ2.ಸೋಮನಾಥ ಚರಿತೆ3. ವೀರೇಶ ಚರಿತೆ4.ಶರಭ ಚಾರಿತ್ರ5.ಹರಿಹರ ಮಹತ್ವ ಎಂಬ ಶರಣರ ಲಿಂಗಾಯತ ತತ್ವಗಳ ಚರಿತೆಯನ್ನು ಬರೆದನಂತೆ ಮತ್ತೆ ಹಲ್ಲುಗಳು ಕಾಣಿಸಿಕೊಂಡವು ಎಂಬ  ಪ್ರತೀತಿ ಇದೆ. ಇದು ಹರಿಹರನ ಸಾತ್ವಿಕ ಕೋಪ ಮತ್ತು  ರಾಘವಾಂಕನ ಗುರು ಭಕ್ತಿಯನ್ನು ತೋರುತ್ತದೆ.  ರಾಘವಾಂಕ ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ  ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ. ಈತನ ಜೀವನ ಹಾಗೂ ಕೃತಿಗಳು ಇವನ ಅನಂತರದ ಕೆಲವು ಕವಿಗಳಿಗೆ ಕುತೂಹಲದ, ಗೌರವದ ವಿಷಯಗಳಾಗಿದ್ದವು.ಇವನ ಜೀವನ ಸಂಗತಿಗಳು ತಕ್ಕಮಟ್ಟಿಗೆ ಚೆನ್ನಬಸವಪುರಾಣದಲ್ಲಿ, ಗುರುರಾಜ ಚಾರಿತ್ರದಲ್ಲಿ, ಭೈರವೇಶ್ವರಕಾವ್ಯ ಕಥಾಮಣಿ ಸೂತ್ರರತ್ನಾಕರದಲ್ಲಿ, ಪದ್ಮರಾಜ ಪುರಾಣದಲ್ಲಿ , ಹರಡಿಕೊಂಡಿವೆ.ಎಲ್ಲಕ್ಕೂ ಮಿಗಿಲಾಗಿ ರಾಘವಾಂಕನ ಕವಿಕಾವ್ಯ ಜೀವನವನ್ನೇ ವಸ್ತುವಾಗಿ ಮಾಡಿಕೊಂಡ ಸಿದ್ದನಂಜೇಶನ ರಾಘವಾಂಕ ಚಾರಿತ್ರ ಒಂದು  ವಿಶೇಷ ರೀತಿಯ ಕೃತಿಯಾಗಿದೆ. ಜನನ ಮತ್ತು ಜೀವನ            ರಾಘವಾಂಕ ಹಂಪೆಯಲ್ಲಿ ಹುಟ್ಟಿ ಬೆಳೆದವ. ಇವನ ತಂದೆ ಮಹಾದೇವಭಟ್ಟ ,ತಾಯಿ ರುದ್ರಾಣಿ. ಹರಿಹರ ಇವನ ಸೋದರ ಮಾವ ಮತ್ತು ಗುರು. ಆತ ದೀಕ್ಷಾಗುರು, ಕಾವ್ಯಗುರುವೂ ಹೌದು. ಹರಿಹರನಂತೆ ರಾಘವಾಂಕನೂ ಪಂಪಾ ವಿರೂಪಾಕ್ಷನ ಪರಮಭಕ್ತ. ಹಂಪೆಯ ಶಂಕರಪ್ರಭು , ಹಂಪೆಯ ಮಾದಿರಾಜ, ಹಂಪೆಯ ಹರೀಶ್ವರ ಇದು ರಾಘವಾಂಕನ ಗುರುಪರಂಪರೆ.ತಾನು ಹರಿಹರನ ವರಸುತ ಎಂದು ಈತ ಹೇಳಿಕೊಂಡಿದ್ದಾನೆ.ಈತ ಸಂಸ್ಕೃತ ಭಾಷೆಗಳಲ್ಲಿಯೂ ಸಮಸ್ತ ಲೌಕಿಕ ವೈದಿಕ ವಿದ್ಯೆಗಳಲ್ಲಿಯೂ ಪರಿಣಿತನಾಗಿದ್ದ . ‘ಉಭಯಕವಿ ಕಮಲರವಿ’ಯಾದ ಈತ ಹರಿಶ್ಚಂದ್ರಕಾವ್ಯವನ್ನು ರಚಿಸಿ ಪಂಪಾಪುರದ ದೇವರಾಜನ ಸಭೆಯಲ್ಲಿ ಓದಿ ವಿದ್ವಾಂಸರನ್ನೊ ರಾಜನನ್ನೂ ಮೆಚ್ಚಿಸಿದ್ದ್ದ.. ರಾಜ ಇವನಿಗೆ ‘ಕವಿಶರಭಭೇರುಂಡ’ ಎಂಬ ವಾದದ ಪೆಂಡೆಯವನ್ನು ಕೊಟ್ಟು ಸನ್ಮಾನಿಸಿದ. ರಾಜಸಭೆಯಲ್ಲಿ ಹೀಗೆ ಮೆಚ್ಚುಗೊಂಡ ಹರಿಶ್ಚಂದ್ರಕಾವ್ಯವನ್ನು ರಾಘವಾಂಕ ಹೊನ್ನ ಹರಿವಾಣದಲ್ಲಿರಿಸಿ ತಂದು ತನ್ನ ಗುರುವು ಮಾವನೂ ಆದ ಹರಿಹರನ ಮುಂದಿರಿಸಿ ಅವನ ಆಶೀರ್ವಾದಗಳನ್ನು ಬೇಡಿದಾಗ , ಆತ ಮೆಚ್ಚಲೊಲ್ಲದೆ , ನರಸ್ತುತಿ ಮಾಡಿದ ತಪ್ಪಿಗಾಗಿ ರಾಘವಾಂಕನ ಹಲ್ಲುಗಳನ್ನು ಮುರಿದ. ಅನಂತರ ಶೈವಕೃತಿಪಂಚಕಗಳನ್ನು ರಚಿಸಿ ಮರಳಿ ತನ್ನ ಹಲ್ಲುಗಳನ್ನು ಪಡೆದ. ಒಮ್ಮೆ ಓರಂಗಲ್ಲಿನ ಪ್ರತಾಪರುದ್ರದೇವನ ಸಭೆಯಲ್ಲಿ ಏಕದ್ವಿತ್ರಿಸಂಧಿಗ್ರಾಹಿಗಳೆಂಬ ಕುಕವಿಗಳನ್ನು ತನ್ನ ಮೀಸಲು ಕವಿತೆಯಾದ ವೀರೇಶ ಚರಿತ್ರೆಯನ್ನು ಓದುವುದರ ಮೂಲಕ ಭಂಗಿಸಿ ಪ್ರತಾಪರುದ್ರನಿಂದ ಉಭಯಕವಿ ಶರಭಭೇರುಂಡ ಎಂಬ ಹೆಸರು ಪಡೆದ.ಅನಂತರ ಹಂಪೆಗೆ ಬಂದು ಹರಿಹರನ ಆಜ್ಞಾನುಸಾರವಾಗಿ ಬೇಲೂರಿಗೆ ಹೋಗಿ ಅಲ್ಲಿ ಬಯಲಾದ.ಇದರಲ್ಲಿ ಐತಿಹಾಸಿಕತೆ ಹಾಗು ಸಾಂಕೇತಿಕತೆಗಳೆರಡೂ ಬೆರೆತಿವೆ. ರಾಘವಾಂಕ ಹರಿಹರನ ವರಸುತನೆಂಬ ಹೆಮ್ಮೆಯ ಶಿಷ್ಯ . ಉಭಯ ಭಾಷಾಪಂಡಿತ ತನ್ನ ಪ್ರತಿವಾದಿಗಳೊಂದಿಗೆ ಸೆಣಸಿ ಬದುಕುವ ಛಲ ಉಳ್ಳವ ಎನ್ನುವ ಅಂಶಗಳು ಹೆಚ್ಚು ವಾಸ್ತವಸಮೀಪವಾದವು. ರಾಘವಾಂಕನ ಹಲ್ಲುಗಳನ್ನು ಹರಿಹರ ಮುರಿದದ್ದು ಅನಂತರ ರಾಘವಾಂಕನು ಶೈವಕೃತಿ ಪಂಚಕಗಳನ್ನು ಬರೆದು ಹಲ್ಲುಗಳನ್ನು ಪಡೆದದ್ದು ಈ ದಂತಕತೆ ವಸ್ತು ರೀತಿಗಳೆರಡರಲ್ಲೂ ಹರಿಹರನ ಪರಂಪರೆಗೆ ವಿರೋಧವಾಗಿ ನಡೆದುಕೊಂಡ ರಾಘವಾಂಕನ ಬಗೆಗೆ ಹರಿಹರ ಪರಂಪರೆ ತೋರಿಸಿದ ಪ್ರತಿಕ್ರಿಯೆಯನ್ನೂ ಅನಂತರ ರಾಘವಾಂಕ ಹರಿಹರ ಪರಂಪರೆಯೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸಾಂಕೇತಿಸುತ್ತದೆ ಎನ್ನಬಹುದು. ಕೃತಿಗಳುರಾಘವಾಂಕನ ಕಾವ್ಯಗಳು ಆರು  ಕೃತಿಗಳು೧.ಹರಿಶ್ಚಂದ್ರ ಕಾವ್ಯ.೨.ಸಿದ್ಧರಾಮ ಪುರಾಣ೩.ಸೋಮನಾಥ ಚರಿತೆ೪. ವೀರೇಶ ಚರಿತೆ೫.ಶರಭ ಚಾರಿತ್ರ೬.ಹರಿಹರ ಮಹತ್ವ – ಈ ಕೃತಿ ಇನ್ನೂ ಸಿಕ್ಕಿಲ್ಲ.            ಇವಗಳಲ್ಲಿ ಮೊದಲ ನಾಲ್ಕು ದೊರೆತು ಪ್ರಕಟವಾಗಿದೆ.ಶರಭ ಚಾರಿತ್ರ ಹಾಗೂ ಹರಿಹರ ಮಹತ್ವ ಇನ್ನೂ ದೊರೆತಿಲ್ಲ.ಇದೂ ಅಲ್ಲದೆ “ದೇವಾಂಗ ದಾರಿಮಯ್ಯನ ಪುರಾಣ”ಎಂಬ ಸಾಂಗತ್ಯ ಗ್ರಂಥವೊಂದು ದೊರಕಿದ್ದು , ರಾಘವಾಂಕನ ಅಂಕಿತದಲ್ಲಿದೆ. ಇದನ್ನು ರಾಘವಾಂಕ ಬರೆದನೇ ಇಲ್ಲವೆ ಎನ್ನುವ ಬಗ್ಗೆ ಖಚಿತವಾಗಿ ತಿಳಿಯಬೇಕಾಗಿದೆ. ವಿಮರ್ಶೆ:ಕನ್ನಡ ಸಾಹಿತ್ಯದಲ್ಲಿ ರಾಘವಾಂಕ ಪ್ರಧಾನವಾಗಿ ಪ್ರಯೋಗಶೀಲನಾದ ಸ್ವತಂತ್ರ ಮನೋಧರ್ಮದ ಕವಿ.’ ಜನ ಬದುಕಬೇಕೆಂದು ಕಾವ್ಯಮುಖದಿಂಪೇಳ್ದನನಪೇಕ್ಶೆಯಿಂದ’ ಎಂಬುದು ಇವನ ಕಾವ್ಯೋದ್ದೇಶವಾಗಿತ್ತು. ಮಹಾಕವಿ ಹರಿಹರನ ಸಮಕಾಲೀನನೂ , ವರಸುತನೂ ಆದ ಈತ ಹರಿಹರನ ಪ್ರಭಾವದ ಸೆಳೆತಕ್ಕೆ ಪ್ರತಿಯಾಗಿ ನಿಂತು ತನ್ನದೇ ಆದೊಂದು ಪರಂಪರೆಯನ್ನು ನಿರ್ಮಿಸಿಕೊಂಡವ.ತನಗೆ ಹಿನ್ನೆಲೆಯಲ್ಲಿದ್ದ ಹರಿಹರನ ರಗಳೆಯ ರೀತಿಯನ್ನು ಅನುಸರಿಸದೆ ಮೊತ್ತಮೊದಲಿಗೆ ಷಟ್ಪದಿ ರೂಪವನ್ನು ಪಳಗಿಸಿ ದೀರ್ಘ ಕಥಾನಿರೂಪಣೆಗೆ ಸೊಗಸಾಗಿ ಅಳವಡಿಸಿಕೊಂಡದ್ದು ಇವನ ಮಹತ್ವದ ಸಾಧನೆ.ಕನ್ನಡ ಸಾಹಿತ್ಯದಲ್ಲಿ ಕವಿ ರನ್ನನನ್ನು ಬಿಟ್ಟರೆ ಅಷ್ಟೇ ನಾಟ್ಯ ಪ್ರತಿಭೆಯನ್ನು ಪ್ರಕಟಿಸಿದ ಮತೊಬ್ಬ ಕವಿ ರಾಘವಾಂಕ.ಹರಿಶ್ಚಂದ್ರಕಾವ್ಯಹರಿಶ್ಚಂದ್ರಕಾವ್ಯ ರಾಘವಾಂಕನ ಕೃತಿಗಳಲ್ಲಿಯೇ ಶ್ರೇಷ್ಥವಾದುದು ಮಾತ್ರವಲ್ಲ . ಕನ್ನಡ ಸಾಹಿತ್ಯದಲ್ಲಿಯೇ ಅಪೂರ್ವವಾದ ಕೃತಿ.ರಾಘವಾಂಕನಿಗಿಂತ ಹಿಂದಿನ ಎಲ್ಲ ಆಕಾರಗಳೊಡನೆ ಇದರ ಸಂವಿಧಾನವನ್ನು ಹೋಲಿಸಿದರೆ ಭಾರತೀಯ ಸಾಹಿತ್ಯದಲ್ಲಿಯೇ ಕಾಣದೊರೆಯುವ ನೂತನ ಸನ್ನಿವೇಶಸೃಷ್ಟಿ , ಕೃತಿಬಂಧೆ ಇಲ್ಲಿದೆ ಎಂಬುದು ಹೆಮ್ಮೆಯ ಸಂಗತಿ ಎಂದು ವಿದ್ವಾಂಸರು ಈ ಕಾವ್ಯದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಹರನೆಂಬುದೇ ಸತ್ಯ ಸತ್ಯವೆಂಬುದೇ ಹರನು’ ಎನ್ನುವ ತತ್ವವನ್ನು ಜೀವನಕ್ಕೆ ಅಳವಡಿಸಿ ಬದುಕಿದ ಸತ್ಯಸಾಧಕ ಹರಿಶ್ಚಂದ್ರನ ಕರುಣಾದ್ಭುತವಾದ ಕಥೆಯೇ ಹರಿಶ್ಚಂದ್ರಕಾವ್ಯ.. ಇದರಲ್ಲಿ ಹದಿನಾಲ್ಕು ಸ್ಥಳಗಳಿದ್ದು ವಾರ್ಧಕ ಷಟ್ಪದಿಯಲ್ಲಿ ರಚಿತವಾಗಿದೆ.ಹರಿಶ್ಚಂದ್ರನ ಪಾತ್ರ ಸತ್ಯ ಸಾಕ್ಷಾತ್ಕಾರಕ್ಕಾಗಿ ನಿರಂತರವೂ ಹೂರಾಡುವ ಆದರ್ಶಾಭೀಪ್ಸೆಯ ಪ್ರತಿಮೆಯಾಗಿದೆ. ಈ ಕೃತಿಯಲ್ಲಿ ಕಂಡುಬರುವ ಶೈಲಿಹದ , ನಾಟ್ಯಮಯವಾದ ಸನ್ನಿವೇಶಗಳು , ಪಾತ್ರಗಳಲ್ಲಿ ಕಂಡುಬರುವ ವೈವಿಧ್ಯ , ಇವೆಲ್ಲವನ್ನೂ ವ್ಯಾಪಿಸಿರುವ ದರ್ಶನ ಇವುಗಳಿಂದ ಈ ಕೃತಿಯನ್ನು ರಾಘವಾಂಕನ ಮಹಾಕಾವ್ಯವೆಂದು ಹೇಳಬಹುದು. ಸಿದ್ಧರಾಮ ಪುರಾಣ‘ಕಾಯಕವೇ ಕೈಲಾಸ’ ಎಂಬ ಶರಣರ ವಚನಕ್ಕೆ ಜೀವಂತ ವ್ಯಾಖ್ಯಾನದಂತೆ ಬಾಳಿದ ಸಿದ್ಧರಾಮನ ಜೀವನವನ್ನು ಕುರಿತ ಕೃತಿ . ‘ ಸಾಕಾರ ನಿಷ್ಠೆ ಭೂತಂಗಳೊಳಗನುಗುಕಂಪತಾನೆ ಪರಬೊಮ್ಮ’ ಎಂಬ ಸೂತ್ರವೆ ಸಿದ್ಧರಾಮ ಚರಿತ್ರೆಯಲ್ಲಿ ಅಡಕವಾಗಿರುವ ತತ್ವ. ಇದು ರಾಘವಾಂಕನ ಧರ್ಮ ಶ್ರದ್ಧೆಯ ಸಾತ್ವಿಕ ಪ್ರತಿನಿಧಿಯಾಗಿದೆ.ಸೋಮನಾಥ ಚರಿತೆಸೌರಾಶ್ಟ್ರದ ಶಿವಭಕ್ತನಾದ ಆದಯ್ಯ ಪುಲಿಗೆರೆಗೆ ಬಂದು ಸೌರಾಶ್ಟ್ರದ ಸೋಮನಾಥನನ್ನು ಅಲ್ಲಿಯ ಜೈನ ಬಸದಿಯಲ್ಲಿ ಪ್ರತಿಷ್ಠಾಪಿಸಿದ ವೀರಮಾಹೆಶ್ವರ ಮನೋಧರ್ಮವನ್ನು ವ್ಯಗ್ರವಾಗಿ ನಿರೂಪಿಸುವ ಕೃತಿ.ವೀರೇಶ ಚರಿತೆ ಹಾಗೂ ಶರಭ ಚಾರಿತ್ರ ಶಿವಪುರಾಣದ ಕಥೆಗಳು. ವೀರೇಶ ಚರಿತೆಯನ್ನು ಕವಿ ಮೀಸಲುಗವಿತೆ ಎಂದು ಕರೆದಿದ್ದಾನೆ.ಈ ಕೃತಿಯಲ್ಲಿ ರಾಘವಾಂಕ ಪ್ರಯೋಗಿಸಿ ನೋಡಿರುವ ಉದ್ದಂಡ ಷಟ್ಪದಿ ರೌದ್ರರಸವನ್ನು ಅಲೆಅಲೆಯಾಗಿ ಅಭಿವ್ಯಕ್ತಪಡಿಸುವ ಪ್ರಯತ್ನವನ್ನು ತೋರಿಸುತ್ತದೆ.ಶಿವನ ಅವತಾರದ ವೀರಭದ್ರನಿಂದ ದಕ್ಷಯಜ್ಞ ದ್ವಂಸವಾದ ಕಥೆಯೇ ಇದರ ವಸ್ತು. ಇತರೆ ದೇವತೆಗಳಿಗಿಂತ ಶಿವನೇ ಶ್ರೇಶ್ಠ ಎಂಬುದನ್ನು ಸಾರುವ ಉದ್ದೇಶ ಇಲ್ಲಿದೆ.ಶರಭ ಚಾರಿತ್ರ ಹೆಸರೇ ಸೂಚಿಸುವಂತೆ ಮಹಾವಿಷ್ಣುವಿನ ಅವತಾರವನ್ನು ಇಕ್ಕಿಮೆಟ್ಟಿದ ಶಿವನ ಶರಭಾವತಾರದ ಮಹಿಮೆಯನ್ನು ಕುರಿತದ್ದೆಂದು ತೋರುತ್ತದೆ.    ವಚನ ರಗಳೆಯ ನಂತರದ ನಡುಗನ್ನಡದ  ಸಾಹಿತ್ಯದ ಯುಗ ಪ್ರವರ್ತಕನೆಂದು  ಪ್ರತೀತಿ ಪಡೆದ ಹೊಸ ಪ್ರತಿಮೆಗಳನ್ನು ಬಳಸಿದ ಜ್ಞಾನವುಳ್ಳ ಕವಿಯಾಗಿದ್ದಾನೆ.ಸಿದ್ಧರಾಮನ ಚರಿತೆಯಲ್ಲಿ ಕಂಡು ಬೆರಗಾದರಾ ಪುಣ್ಯ ದಂಪತಿಗಳು ಎನ್ನುವ ಕಾವ್ಯದಲ್ಲಿಬಾಲಕನು ಮಲ್ಲಯ್ಯನನ್ನು ಕಾಣುವ ಹಂತದಲ್ಲಿ ಅಳುತ್ತ ಗುಹೆ ಗವ್ವರಗಳ ಮುಂದೆ ಮರಳಿನ ಹುಡಿಯಲ್ಲಿ ಬಿಕ್ಕುತ್ತಿರುವಾಗ ತರು ಗುಲ್ಮ ಲತೆಗಳೆದ್ದು ಅಳುತಿರ್ದವು, ಗುಹೆ ಗವ್ವರಗಳು ಬಾಲಕ ಸಿದ್ಧರ್ಮಯ್ಯನ ಅಳುವಿನ ಆಕ್ರಂದನವನ್ನು ಮಾರ್ದನಿಸುತ್ತಿದ್ದವು ಎಂದು ಸೊಗಸಾಗಿ ವರ್ಣಿಸಿದ್ದಾನೆ. ಶರಣರ ಆಶಯಗಳನ್ನು ಅರ್ಥೈಸಿಕೊಂಡು ನ್ಯಾಯ ಒದಗಿಸಲು ಶ್ರಮಿಸಿದ ದಿಟ್ಟ ಕವಿ ರಾಘವಾಂಕ. ರಾಘವಾಂಕರ ಹೆಸರಿನಲ್ಲಿ ಕೆಲ ಪ್ರಕ್ಷಿಪ್ತ ಚರಿತ್ರೆಗಳು ಸೊಲ್ಲಾಪೂರ ಭಾಗದಲ್ಲಿ ಹುಟ್ಟಿಕೊಂಡು ಸಾಹಿತ್ಯ ಮತ್ತು ಶರಣರ ಚರಿತ್ರೆಗೆದ್ರೋಹ ಮಾಡಿವೆ.————————————————————————– ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ನಿಮ್ಮೊಂದಿಗೆ, ಸಾವಿಲ್ಲದ ಶರಣರು

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಮೌನ ಯೋಗಿ ಶ್ರೀ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರು ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರು ಕರ್ನಾಟಕದ ಶರಣ ಪರಂಪರೆಯ ಅತ್ಯಂತ ಶ್ರೇಷ್ಠ ಹಾಗೂ ಅವಿಸ್ಮರಣೀಯ ಮೌನಯೋಗಿಗಳಾಗಿದ್ದಾರೆ.  ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಬಳಗಾನೂರು ಗ್ರಾಮದ ಚಿಕ್ಕೇನಕೊಪ್ಪ ಮಠದಲ್ಲಿ ನೆಲೆಸಿ, ತಮ್ಮ ತಪಃಶಕ್ತಿಯಿಂದ ಜನಸಾಮಾನ್ಯರ ಉದ್ಧಾರಕ್ಕಾಗಿ ಶ್ರಮಿಸಿದ ಮಹಾಪುರುಷರಾಗಿದ್ದಾರೆ. ವ್ಯಕ್ತಿತ್ವ ಮತ್ತು ಜೀವನ  ಶೈಲಿಅವಧೂತ ಜೀವನ: ಚನ್ನವೀರ ಶರಣರು ತನುವಿನಲ್ಲಿ ನಿರ್ಮೋಹತ್ವ, ಮನದಲ್ಲಿ ನಿರಹಂಕಾರ ಮತ್ತು ಜ್ಞಾನದಲ್ಲಿ ಪರಮಾನಂದವನ್ನು ರೂಢಿಸಿಕೊಂಡು ಸರಳವಾಗಿ ಬದುಕಿದವರು. ಮೌನಯೋಗಿ: ಅವರು ಒಬ್ಬ ಅವಧೂತ ಫಕೀರನಂತೆ ಜೀವಿಸುತ್ತಾ, ಸಮಾಜಕ್ಕೆ ಶಾಂತಿ ಮತ್ತು ಸೌಹಾರ್ದತೆಯ ದಾರಿಯನ್ನು ತೋರಿಸಿದ ಮಹಾನ್ ತಪಸ್ವಿ. ಸಾಹಿತ್ಯ ಮತ್ತು ಇತಿಹಾಸಶರಣರ ಪುರಾಣ:  ಗದಗದ ವೀರೇಶ್ವರ ಪುಣ್ಯಾಶ್ರಮದ ಖ್ಯಾತ ಸಂಗೀತಜ್ಞರಾದ ಪಂ. ಪುಟ್ಟರಾಜ ಗವಾಯಿಗಳು ಇವರ ಜೀವನ ಚರಿತ್ರೆಯನ್ನು ಆಧರಿಸಿ ಚಿಕೇನಕೊಪ್ಪದ ಚೆನ್ನವೀರ ಶರಣರ ಪುರಾಣ ಎಂಬ ಕೃತಿಯನ್ನು ರಚಿಸಿದ್ದಾರೆ. ಜಾತ್ರೆ ಮತ್ತು ಪುಣ್ಯಸ್ಮರಣೋತ್ಸವ ವಾರ್ಷಿಕ ಉತ್ಸವ: ಪ್ರತಿವರ್ಷ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಇವರ ಪುಣ್ಯಸ್ಮರಣೋತ್ಸವ ಮತ್ತು ಮಹಾ ರಥೋತ್ಸವವನ್ನು ಸಡಗರದಿಂದ ಆಚರಿಸಲಾಗುತ್ತದೆ. ಶರಣರ ಬುತ್ತಿ:  ಈ ಜಾತ್ರೆಯ ಒಂದು ವಿಶಿಷ್ಟ ಸಂಪ್ರದಾಯವೆಂದರೆ, ಸುತ್ತಮುತ್ತಲಿನ ಹಳ್ಳಿಗಳ ಮಹಿಳೆಯರು ಭಕ್ತರಿಗಾಗಿ ಸಾವಿರಾರು ರೊಟ್ಟಿ, ಶೇಂಗಾ ಹೋಳಿಗೆ ಮತ್ತು ಕರ್ಜಿಕಾಯಿಗಳನ್ನು ತಯಾರಿಸಿ, ಬುತ್ತಿಯನ್ನು ತಲೆಯ ಮೇಲೆ ಹೊತ್ತು ಮೆರವಣಿಗೆಯ ಮೂಲಕ ಶ್ರೀಮಠಕ್ಕೆ ತರುತ್ತಾರೆ. ಸಾಮಾಜಿಕ ಸೇವೆಗಳು: ಜಾತ್ರೆಯ ಸಂದರ್ಭದಲ್ಲಿ ಉಚಿತ ಸಾಮೂಹಿಕ ವಿವಾಹಗಳು, ನೇತ್ರ ಚಿಕಿತ್ಸಾ ಶಿಬಿರಗಳು, ರಕ್ತದಾನ ಮತ್ತು ಆರೋಗ್ಯ ತಪಾಸಣೆಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರೀಮಠವು ಜನಪರ ಕಾರ್ಯಗಳನ್ನು ಮಾಡುತ್ತದೆ. ಶ್ರೀಮಠದ ಸಮಾಜ ಸೇವೆ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಮಠವು ಕೇವಲ ಧಾರ್ಮಿಕ ಕೇಂದ್ರವಾಗಿರದೆ ಶಿಕ್ಷಣ ಸಂಸ್ಥೆಗಳು, ಉಚಿತ ಪ್ರಸಾದ ನಿಲಯ (ದಾಸೋಹ) ಮತ್ತು ಸಾವಯವ ಕೃಷಿ ಹಾಗೂ ಗೋಶಾಲೆಯನ್ನು ನಡೆಸುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ   ನೀಡುತ್ತಿದೆ.    ಚಿಕ್ಕೇನಕೊಪ್ಪದ ಮೌನಯೋಗಿ, ಪೂಜ್ಯ ಶ್ರೀ ಚನ್ನವೀರ ಶರಣರ ವೈಯಕ್ತಿಕ ಲೌಕಿಕ ಜೀವನ ಮತ್ತು ಅವರ ತಂದೆ-ತಾಯಿಗಳ ನಿಖರವಾದ ಹೆಸರುಗಳ ಕುರಿತು ಇತಿಹಾಸದ ದಾಖಲೆಗಳಲ್ಲಾಗಲಿ ಅಥವಾ ಸಾರ್ವಜನಿಕ  ಮೂಲಗಳಲ್ಲಾಗಲಿ ಯಾವುದೇ ಸ್ಪಷ್ಟ ಮಾಹಿತಿಯು ಲಭ್ಯವಿಲ್ಲ. ಇದಕ್ಕೆ ಪ್ರಮುಖ ಕಾರಣಗಳು ಮತ್ತು ಅವರ ಹಿನ್ನೆಲೆಯ ಕುರಿತಾದ ಕೆಲವು ಮುಖ್ಯ ಸಂಗತಿಗಳು  ಅವಧೂತ ಹಾಗೂ ಮೌನ ಪರಂಪರೆ:  ಶ್ರೀ ಚನ್ನವೀರ ಶರಣರು ಒಬ್ಬ ಪರಮ ಅವಧೂತರಾಗಿ ಮತ್ತು ಮೌನಯೋಗಿಯಾಗಿ ಜೀವಿಸಿದರು. ಅವರು ತಮ್ಮ ಪೂರ್ವಾಶ್ರಮದ (ಸಂಸಾರದ ಅಥವಾ ಹುಟ್ಟಿನ) ವಿವರಗಳನ್ನು ಸಂಪೂರ್ಣವಾಗಿ ತೊರೆದು, ಕೇವಲ ಲೌಕಿಕ ಜಗತ್ತಿನ ಕಲ್ಯಾಣಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಬೆಳಕಿಗೆ ಬಾರದ ಹಿನ್ನೆಲೆ:  ಇತಿಹಾಸದ ಪ್ರಕಾರ, ಅವರು ಬಳಗಾನೂರಿನ ಚಿಕ್ಕೇನಕೊಪ್ಪ ಮಠಕ್ಕೆ ಬಂದು ನೆಲೆಸಿದ ನಂತರವೇ ಅವರ ದಿವ್ಯ ತಪಃಶಕ್ತಿ ಮತ್ತು ಪವಾಡಗಳು ಜನಸಾಮಾನ್ಯರಿಗೆ ತಿಳಿಯತೊಡಗಿದವು. ಹೀಗಾಗಿ ಅವರ ತಂದೆ, ತಾಯಿ ಅಥವಾ ಬಾಲ್ಯದ ಲೌಕಿಕ ವಿವರಗಳು ಮರೆಯಾಗಿ, ಅವರು ಕೇವಲ “ಚಿಕ್ಕೇನಕೊಪ್ಪದ ಶರಣರು” ಎಂದೇ ಪ್ರಸಿದ್ಧರಾದರು. ಸಾಹಿತ್ಯದಲ್ಲಿ ಉಲ್ಲೇಖ:  ಪಂ. ಪುಟ್ಟರಾಜ ಗವಾಯಿಗಳು ಬರೆದಿರುವ ಚಿಕೇನಕೊಪ್ಪದ ಚೆನ್ನವೀರ ಶರಣರ ಪುರಾಣ ಗ್ರಂಥದಲ್ಲಿಯೂ ಇವರ ಅಧ್ಯಾತ್ಮಿಕ ಸಾಧನೆ, ಪವಾಡಗಳು ಮತ್ತು ಸಮಾಜ  ಮುಖಿ ಸೇವೆ ಬಗ್ಗೆ ಹೇಳಿದ್ದಾರೆಯೇ ಹೊರತು ಅವರ ಪೂರ್ವಾಶ್ರಮದ ಬಗ್ಗೆ ಮಾಹಿತಿ ನೀಡಿಲ್ಲ. ಚಿಕ್ಕೇನಕೊಪ್ಪದ ಮಹಾನ್ ತಪಸ್ವಿ ಶ್ರೀ ಚನ್ನವೀರ ಶರಣರ ನಿಖರವಾದ ಹುಟ್ಟಿದ ದಿನಾಂಕ ಮತ್ತು ವರ್ಷ ಇತಿಹಾಸದ ದಾಖಲೆಗಳಲ್ಲಿ ಎಲ್ಲೂ ಲಭ್ಯವಿಲ್ಲ. ಅವರು ಒಬ್ಬ ಸಿದ್ಧ ಪುರುಷರಾಗಿದ್ದು, ಸಂಸಾರ ಹಾಗೂ ಕಾಲದ ಗಡಿಯಿಂದ ದೂರವಿದ್ದ ಕಾರಣ ಅವರ ಬಾಲ್ಯ ಮತ್ತು ಜನನದ ವಿವರಗಳು ಬೆಳಕಿಗೆ ಬಂದಿಲ್ಲ.  ಅವರ ಮಹಾಸಮಾಧಿ (ಮರಣ) ಹಾಗೂ ಪುಣ್ಯಸ್ಮರಣೆಯ   1. ಮರಣ / ಲಿಂಗೈಕ್ಯರಾದ ವಿವರ ಲಿಂಗೈಕ್ಯರಾದ ತಿಂಗಳು: ಶ್ರೀ ಚನ್ನವೀರ ಶರಣರು  1995 ಜನೆವರಿ ತಿಂಗಳ ಅವಧಿಯಲ್ಲಿ ಲಿಂಗೈಕ್ಯರಾದರು (ಮಹಾಸಮಾಧಿ ಹೊಂದಿದರು).:    ಘನಮೌನಿಗಳು:  ಶರಣರನ್ನು ಇತಿಹಾಸದಲ್ಲಿ “ಘನಮೌನಿ ಚಿಕ್ಕೇನಕೊಪ್ಪದ ಚನ್ನವೀರ ಶರಣರು” ಎಂದು ಕರೆಯಲಾಗುತ್ತದೆ. ಅವರು ಮೌನವ್ರತವನ್ನು ಆಚರಿಸುತ್ತಿದ್ದರಿಂದ ತಮ್ಮ ಜನ್ಮ ವೃತ್ತಾಂತವನ್ನು ಯಾರೊಂದಿಗೂ ಹಂಚಿಕೊಳ್ಳಲಿಲ್ಲ. ದೈವೀಪುರುಷ: ಭಕ್ತರ ನಂಬಿಕೆಯ ಪ್ರಕಾರ, ಅವರು ಯಾವುದೇ ಸಾಮಾನ್ಯ ಮನುಷ್ಯನಂತೆ ಹುಟ್ಟು-ಸಾವಿನ ಬಂಧನಕ್ಕೆ ಒಳಗಾಗದೆ, ಕೇವಲ ಲೋಕ ಕಲ್ಯಾಣಕ್ಕಾಗಿ ಬಂದು ಮಠದಲ್ಲಿ ನೆಲೆಸಿದ ದೈವೀ ಸ್ವರೂಪಿಯಾಗಿದ್ದರು.ಪ್ರತಿ ವರ್ಷ ಜನೆವರಿ ತಿಂಗಳಲ್ಲಿ ನಡೆಯುವ ಅವರ ಪುಣ್ಯಸ್ಮರಣೆಯ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡು ಶರಣರ ಗದ್ದುಗೆಯ ದರ್ಶನ ಪಡೆಯುತ್ತಾರೆ. ಸಮಾಜಮುಖಿ ಕಾರ್ಯಕ್ರಮಗಳನ್ನು ನಿಯೋಜಿಸುವ ಮೂಲಕ ಬಸವ ತತ್ವ ಪ್ರಸಾರ ಮಾಡಿದರು. ಮೌನವೇ ತಪಸ್ಸು ಮಾತು ಬೆಳ್ಳಿ ಮೌನ ಬಂಗಾರ ಎಂದು ತಿಳಿದು ಭಕ್ತರಿಗೆ ಸಂದೇಶ ನೀಡುತ್ತಿದ್ದರು. ಒಬ್ಬ ಶ್ರೇಷ್ಠ ಶಿವಯೋಗ ಸಾಧಕರು. ಸಾವಿಲ್ಲದ ಶರಣರು. ಬಸವ ಮಾರ್ಗದ ರೂವಾರಿಗಳು ಚಿಕ್ಕೇನಕೊಪ್ಪದ ಶರಣರು. _______________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಸಾವಿಲ್ಲದ ಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ ಕ್ರಾಂತಿಕಾರಿ ಕವಿ ಸರ್ವಜ್ಞ ಸರ್ವಜ್ಞ ಕವಿ 16ನೇ  ಶತಮಾನದಲ್ಲಿ ಜೀವಿಸಿದ್ದ ಕನ್ನಡದ ಅತ್ಯಂತ ಜನಪ್ರಿಯ ಕ್ರಾಂತಿಕಾರಿ ತ್ರಿಪದಿ ಕವಿ, ತತ್ವಜ್ಞಾನಿ ಮತ್ತು ಸಮಾಜ ಸುಧಾರಕರು.  ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದ ಸರ್ವಜ್ಞ ಅಪ್ಪಟ ಬಸವ ಭಕ್ತ ಕ್ರಾಂತಿಕಾರಿ ಕವಿ. ತನ್ನ ಮೊನಚಾದ ಟೀಕೆ ಟಿಪ್ಪಣಿಗಳು ವಿಡಂಬನೆಯಿಂದ ಸುತ್ತಲಿನ ಅಂಕು ಡೊಂಕುಗಳನ್ನು ತಿದ್ದಿದ್ದಾನೆ. ಸಮಾಜದ ಆಷಾಢಭೂತಿತನಕ್ಕೆ ನೇರ ಚಾಟಿ ಏಟು ಬೀಸಿದ್ದಾನೆ. ಮೂರು ಸಾಲುಗಳ ಸರಳ ‘ತ್ರಿಪದಿ’ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಾರ್ವಕಾಲಿಕ ನೀತಿ ಮತ್ತು ಮೌಲ್ಯಗಳನ್ನು ಬೋಧಿಸಿದ ದಾರ್ಶನಿಕರಾಗಿದ್ದಾರೆ.  ಜನನ ಮತ್ತು ಬಾಲ್ಯ ಹುಟ್ಟೂರು: ಇಂದಿನ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಅಬಲೂರು. ನಿಜನಾಮ: ಸಂಶೋಧನೆಗಳ ಪ್ರಕಾರ ಈತನ ನಿಜವಾದ ಹೆಸರು ಪುಷ್ಪದತ್ತ, ‘ಸರ್ವಜ್ಞ’ ಎಂಬುದು ಕಾವ್ಯನಾಮ. ತಂದೆ ತಾಯಿ : ತಂದೆ ಕುಂಬಾರ ಮಲ್ಲ  ಮತ್ತು ತಾಯಿ ಮಾಳೆ (ಮಾಳಲಾದೇವಿ). ತಂದೆ ಕುಂಬಾರ ಮಲ್ಲ ತಾಯಿ ಮಾಳಲಾದೇವಿ ಇಂದು ಧರೆಗೆ ಬಂದ ಚಂದ್ರಶೇಖರ ನಾನು ಸರ್ವಜ್ಞ  ಎಂದು ತನ್ನ ಹುಟ್ಟಿನ ಬಗ್ಗೆಯೇ ಹೇಳಿಕೊಂಡಿದ್ದಾನೆ. ಸಾಹಿತ್ಯ ಮತ್ತು ತ್ರಿಪದಿಗಳ ವೈಶಿಷ್ಟ್ಯ ತ್ರಿಪದಿ ಚಂದಸ್ಸು: ಮೂರು ಸಾಲುಗಳ ಪದ್ಯ ಪ್ರಕಾರವಾದ ತ್ರಿಪದಿಗೆ ಸರ್ವಜ್ಞ ಅತ್ಯಂತ ಪ್ರಸಿದ್ಧರಾಗಿದ್ದಾರೆ. ಜಾತಿ ಪದ್ಧತಿಯ ವಿರೋಧ, ಮೂಢನಂಬಿಕೆಗಳ ಖಂಡನೆ, ನೀತಿ, ಕಾಯಕದ ಮಹತ್ವ, ಸ್ನೇಹ ಮತ್ತು ಲೌಕಿಕ ಜ್ಞಾನ ಇವರ ವಚನಗಳ ಮುಖ್ಯ ವಸ್ತುಗಳಾಗಿದ್ದವು. ಸರಳ ಭಾಷೆ: ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಉಪಮೆ ಹಾಗೂ ಉದಾಹರಣೆಗಳನ್ನು ಬಳಸಿ ಕಾವ್ಯ ರಚಿಸಿದ್ದಾರೆ.  ಪ್ರಸಿದ್ಧ ವಚನ (ತ್ರಿಪದಿ) ತಮ್ಮ ಜ್ಞಾನದ ಕುರಿತು ಸರ್ವಜ್ಞ ಅತ್ಯಂತ ವಿನಮ್ರವಾಗಿ ಹೀಗೆ ಹೇಳಿಕೊಂಡಿದ್ದಾರೆ:  “ಸರ್ವಜ್ಞನೆಂಬುವನು ಗರ್ವದಿಂದಾದವನೇ? ಸರ್ವರೊಳು ಒಂದೊಂದು ನುಡಿಗಲಿತು ವಿದ್ಯೆಯ ಪರ್ವತವೆ ಆದ ಸರ್ವಜ್ಞ”  ( ನಾನು ಹುಟ್ಟುತ್ತಲೇ ಎಲ್ಲವನ್ನೂ ತಿಳಿದ ಮಹಾಜ್ಞಾನಿಯಾಗಿರಲಿಲ್ಲ ಅಥವಾ ಅಹಂಕಾರದಿಂದ ಸರ್ವಜ್ಞನಾಗಲಿಲ್ಲ. ಸಮಾಜದಲ್ಲಿ ಸಿಗುವ ಪ್ರತಿಯೊಬ್ಬರಿಂದಲೂ ಒಂದೊಂದು ಒಳ್ಳೆಯ ವಿಷಯಗಳನ್ನು ಕಲಿತು ಜ್ಞಾನದ ಪರ್ವತವಾಗಿದ್ದೇನೆ) ಎಂದು ಹೇಳಿಕೊಂಡಿದ್ದಾನೆ. ಸರ್ವಜ್ಞನು ಕಂಡ ಬಸವಣ್ಣ ಸರ್ವಜ್ಞ ತನ್ನ ತ್ರಿಪದಿಗಳಲ್ಲಿ ಬಸವಣ್ಣ ಮತ್ತು ಶರಣರ ಕಾರ್ಯವನ್ನು ನೆನೆಸಿದ್ದಾನೆ. ಕನ್ನಡದ ಪ್ರಸಿದ್ಧ ತ್ರಿಪದಿ ಕವಿ ಸರ್ವಜ್ಞರು 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರರಾದ ವಿಶ್ವಗುರು ಬಸವಣ್ಣನವರ ಮಹಿಮೆ, ಭಕ್ತಿ ಮತ್ತು ಆದರ್ಶಗಳನ್ನು ತಮ್ಮ ಕೆಲವು ಪ್ರಮುಖ ತ್ರಿಪದಿಗಳಲ್ಲಿ ಅತ್ಯಂತ ಗೌರವದಿಂದ ಕೊಂಡಾಡಿದ್ದಾರೆ. ಲಿಂಗಾಯತ ಧರ್ಮ ಮತ್ತು ಸಮಾಜಕ್ಕೆ ಬಸವಣ್ಣನವರ ಕೊಡುಗೆಯನ್ನು ಸರ್ವಜ್ಞರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸರ್ವಜ್ಞ ಒಬ್ಬ ನೇರ ದಿಟ್ಟ ನಿರಂತರ ಕ್ರಾಂತಿಕಾರಿ ಕವಿ. ಒಂದು ಅರ್ಥದಲ್ಲಿ ಬಸವಣ್ಣನವರ ಶರಣರ ಕ್ರಾಂತಿಯ ವಾರಸುದಾರ.  ಬಸವಣ್ಣನವರ ಕುರಿತಾದ ಸರ್ವಜ್ಞನ ಪ್ರಮುಖ ತ್ರಿಪದಿಗಳು ಮತ್ತು ಅವುಗಳ ಸರಳ ಭಾವಾರ್ಥಗಳು ೧. ಲಿಂಗಾಯತ ಧರ್ಮದ ಕರ್ತೃ ಬಸವಣ್ಣ ಬಸವ ಗುರುವಿನ ಹೆಸರು ಬಲ್ಲವರಾರಿಲ್ಲ | ಹುಸಿಮಾತನಾಡಿ ಕೆಡದಿರಿ ಲಿಂಗಾಯತಕೆ | ಬಸವಣ್ಣನೆ ಕರ್ತೃ ಸರ್ವಜ್ಞ ||  ಬಸವ ಗುರುವಿನ ಮಹಿಮೆ ಮತ್ತು ಹೆಸರಿನ ಶಕ್ತಿ ಎಲ್ಲರಿಗೂ ತಿಳಿಯದು. ಸುಳ್ಳು ಮಾತುಗಳನ್ನಾಡಿ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ. ಈ ಲಿಂಗಾಯತ ಧರ್ಮಕ್ಕೆ ಮತ್ತು ವೈಚಾರಿಕ ಸಮಾಜಕ್ಕೆ ಬಸವಣ್ಣನವರೇ ನಿಜವಾದ ಮೂಲಪುರುಷ ಅಥವಾ ಕರ್ತೃವಾಗಿದ್ದಾರೆ.  ೨. ಬಸವ ನಾಮಸ್ಮರಣೆಯ ಮಹಿಮೆ ಬಸವನೆಂದಡೆ ಪಾಪ ದೆಶೆಗೆಟ್ಟು ಹೋಗುವುದು | ಬಸವನ ಪಾದವ ನಂಬಿದ ಭಕ್ತರು | ಹಸನಾದರಯ್ಯ ಸರ್ವಜ್ಞ ||  ಬಸವ’ ಎಂಬ ಹೆಸರನ್ನು ಭಕ್ತಿಯಿಂದ ಉಚ್ಚರಿಸಿದರೆ ಸಾಕು, ಮನುಷ್ಯನ ಪಾಪಗಳೆಲ್ಲವೂ ದಿಕ್ಕೆಟ್ಟು ಓಡಿಹೋಗುತ್ತವೆ. ಬಸವಣ್ಣನವರ ತತ್ತ್ವಗಳನ್ನು ಮತ್ತು ಅವರ ಪಾದಗಳನ್ನು ನಂಬಿ ನಡೆದ ಭಕ್ತರ ಜೀವನವು ಅತ್ಯಂತ ಸುಂದರವಾಗಿ ಹಾಗೂ ಪಾವನವಾಗಿ ರೂಪಿತಗೊಂಡಿದೆ.  ೩. ಬಸವಣ್ಣನೇ ಜಗದ ಗುರು ಬಸವನೆ ಜಗದಾದಿ ಬಸವನೆ ಜಗದೀಶ | ಬಸವನೇ ಜಗದ ಗುರುಪ್ರಣವವೆಂದರಿದು | ಬಸವನನು ಜಪಿಸು ಸರ್ವಜ್ಞ ||   ಬಸವಣ್ಣನೇ ಈ ಜಗತ್ತಿನ ಕಲ್ಯಾಣದ ಆದಿಯಾಗಿದ್ದಾನೆ, ಅವನೇ ದೈವಸ್ವರೂಪಿಯಾಗಿದ್ದಾನೆ. ಬಸವಣ್ಣನೇ ಇಡೀ ಜಗತ್ತಿಗೆ ಓಂಕಾರದಂತಹ (ಪ್ರಣವ) ಜ್ಞಾನವನ್ನು ನೀಡಿದ ಜಗದ್ಗುರು ಎಂಬುದನ್ನು ಅರಿತು, ಸದಾ ಆತನ ನಾಮವನ್ನು ಜಪಿಸು.  ೪. ಮಂತ್ರಸಿದ್ಧ ಬಸವಣ್ಣ ಕಂತುಹರ ಬಸವಣ್ಣ ಚಿಂತಾಯಕ ಬಸವಣ್ಣ | ಮಂತ್ರಸಿದ್ದನು ಬಸವಣ್ಣನ ಪಾದಕ್ಕ | ಶರಣೆನ್ನಿರೆಲ್ಲ ಸರ್ವಜ್ಞ  ಕಾಮವನ್ನು ಗೆದ್ದವನು ಬಸವಣ್ಣ. ಭಕ್ತರ ಚಿಂತೆಗಳನ್ನು ಪರಿಹರಿಸುವವನು ಬಸವಣ್ಣ. ಆಧ್ಯಾತ್ಮಿಕ ಮಂತ್ರಸಿದ್ಧಿಯನ್ನು ಹೊಂದಿರುವ ಆ ಬಸವಣ್ಣನ ಪಾದಗಳಿಗೆ ನಾವೆಲ್ಲರೂ ಭಕ್ತಿಯಿಂದ ಶರಣಾಗಬೇಕು. ೫. ಶಂಭುವಿನ ಕರುಣೆ ನಂಬಿ ಹೇಳುವೆ ಬಸವ ನಿಂಬಿಸಿ ಮಹಿಮೆಯ | ಶಂಭುವಿನ ಕರುಣ ನಿನಗುಂಟ ನಾನಿಮ್ಮ | ನಂಬಿ ಹೇಳಿದೆನು ಸರ್ವಜ್ಞ  ಬಸವಣ್ಣನೇ, ನಿನ್ನ ಅಪಾರವಾದ ಮಹಿಮೆಯನ್ನು ನಾನು ಪೂರ್ಣವಾಗಿ ನಂಬಿ ಹೇಳುತ್ತಿದ್ದೇನೆ. ಸಾಕ್ಷಾತ್ ಶಿವನ (ಶಂಭುವಿನ) ಸಂಪೂರ್ಣ ಕೃಪೆ ನಿನ್ನ ಮೇಲಿದೆ ಎಂಬುದನ್ನು ನಾನು ದೃಢವಾಗಿ ನಂಬಿ ಜಗತ್ತಿಗೆ ಸಾರುತ್ತಿದ್ದೇನೆ ಎಂದು ಹೇಳಿದ್ದಾರೆ.  ೬ ಲೋಕಕ್ಕೆ ಬಸವಣ್ಣನೇ ಮುದ್ದು ಹಸಿದೊಡಂಬಲಿ  ಮುದ್ದು ಬಿಸಿಲಿಗೆ ಕೊಡೆ ಮುದ್ದು ಬಸುರಿಗೆ ಶಿಶು ಮುದ್ದು ಲೋಕಕ್ಕೆ ಬಸವಣ್ಣನೇ ಮುದ್ದು ಸರ್ವಜ್ಞ. ಬೇಸಿಗೆಯ ಬಳಲಿಕೆಗೆ ಅಂಬಲಿ ಕೊಟ್ಟಾಗ ಹೊಟ್ಟೆಗೆ ಹಿತವಾಗಿರುತ್ತದೆ. ಹಸಿದ ಹೊಟ್ಟೆ ತಣ್ಣಗೆ ಮಾಡುವ ಅಂಬಲಿ ಆರೋಗ್ಯಕ್ಕೂ ಒಳ್ಳೆಯದು. ಬಿಸಿಲಿಗೆ ಒಂದು ಕೊಡೆ ಇದ್ದರೆ ಅದಕ್ಕಿಂತ ಹೆಚ್ಚಿನ ಆನಂದ ಇನ್ನೊಂದಿಲ್ಲ. ಬಸುರಿ ಹೆಣ್ಣು ಮಗಳು ಓಣಿಯಲ್ಲಿ ಆಡುವ ಎಲ್ಲಾ ಮಕ್ಕಳನ್ನು ಪ್ರೀತಿಯಿಂದ ಮುದ್ದಾಡುತ್ತಾಳೆ ಬಸುರಿ. ೭ ಬಸವ ಪೀಠವು ಎದ್ದು ಬಸವ ಪೀಠವು ಎದ್ದು ಒಸೆದು ನಾಣ್ಯವು ಹುಟ್ಟಿ ಬಸವನ ಮುದ್ರೆ ಮೆರೆದಾವು,ಧರೆಯವಗೆ  ವಶವಾಗದಿಹುದೆ  ಸರ್ವಜ್ಞ ಕಲ್ಯಾಣ ಕ್ರಾಂತಿಯ ನಂತರ ಅನುಭವ ಮಂಟಪವು ಒಂದು ಪ್ರಬಲ ಪ್ರಜಾಪ್ರಭುತ್ವದ ಅಂಗವಾಗಿ ಹೊರ ಹೊಮ್ಮಿತು.ಅದನ್ನೇ ಸರ್ವಜ್ಞ ಬಸವ ಪೀಠವು ಎದ್ದು ಜಾಗೃತಗೊಂಡು ಹೊಸ ನಾಣ್ಯಗಳು ಚಲಾವಣೆಗಾಗಿ ಹುಟ್ಟಿ ಕೊಂಡು ಆ ಚಲಾವಣೆಗೊಳ್ಳುವ ನಾಣ್ಯಗಳ ಮೇಲೆ ಬಸವನ. ಮುದ್ರೆ ನಾಡಲ್ಲಿ ಮೆರೆಯುವಾಗ ಬೆಳಕಿಗೆ ಬರುವಾಗ. ಇಡೀ ಜಗತ್ತು ಅವನಿಗೆ ವಶವಾಗಲು ಸಾಧ್ಯವಿಲ್ಲವೇ ? ಎಂದು ಪ್ರಶ್ನಿಸಿದ್ದಾನೆ. ಸರ್ವಜ್ಞರು ತಮ್ಮ ಈ ತ್ರಿಪದಿಗಳ ಮೂಲಕ ಬಸವಣ್ಣನವರನ್ನು ಕೇವಲ ಒಬ್ಬ ವ್ಯಕ್ತಿಯಾಗಿ ನೋಡದೆ, ಸಮಾಜವನ್ನು ಉದ್ಧಾರ ಮಾಡಲು ಬಂದ ಸಾಕ್ಷಾತ್ ಶಿವ ಕಲ್ಯಾಣದ ಜ್ಯೋತಿಯಾಗಿ ಆರಾಧಿಸಿದ್ದಾರೆ. ಸರ್ವಜ್ಞ ಒಬ್ಬ ದಿಟ್ಟ ಪ್ರಬುದ್ಧ ಪ್ರಾಮಾಣಿಕ ವೈಚಾರಿಕ ವ್ಯಕ್ತಿ. ತನ್ನ ಅನಿಸಿಕೆ ಭಾವನೆಗಳನ್ನು ನೇರವಾಗಿ ಹೇಳುವ ಗಟ್ಟಿತನ ಹೊಂದಿರುವ ಅಪರೂಪದ ಕವಿ. ಆಡು ಮುಟ್ಟದ ಸೊಪ್ಪಿಲ್ಲ ಕವಿ ಸರ್ವಜ್ಞ ಬರೆಯದ ವಿಷಯವಿಲ್ಲ ಎನ್ನುವ ಜಾನಪದ ನಾಣ್ಣುಡಿಯಂತೆ ಸರ್ವಜ್ಞ ಎಲ್ಲಾ ವಿಷಯಗಳ ಬಗ್ಗೆ  ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಆರೋಗ್ಯ ಕುಟುಂಬ ಗಂಡ ಹೆಂಡತಿ ಸಂಬಂಧ ಆಹಾರ ವೈದಿಕ ವ್ಯವಸ್ಥೆಯ ವಿರುದ್ಧ ಟೀಕೆ ಹೀಗೆ ಎಲ್ಲಾ ವಿಷಯಗಳನ್ನು ತನ್ನ ತ್ರಿಪದಿಗಳಲ್ಲಿ ದಾಖಲಿಸಿದ್ದಾನೆ. ಜಯಂತಿ: ಪ್ರತಿ ವರ್ಷ ಫೆಬ್ರವರಿ 20 ರಂದು ಸರ್ವಜ್ಞ ಜಯಂತಿಯನ್ನು ಸರ್ಕಾರಿ ಆಚರಣೆಯಾಗಿ ಆಚರಿಸಲಾಗುತ್ತದೆ.  ಯಾವುದಾದರೂ ಒಂದು ವಿಶ್ವ ವಿದ್ಯಾಲಯದ ಆವರಣದಲ್ಲಿ ಸರ್ವಜ್ಞ ಪೀಠ ಸ್ಥಾಪಿಸಿ ಅವರ ಉಜ್ವಲ ಚಿಂತನೆ ಮಾನವ ಪ್ರೇಮ ಸಾಮಾಜಿಕ ಚಿಂತನೆಗಳ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ನಡೆಯಬೇಕು. ________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣರ ಸಂಗಾತಿ ಸಾವಿಲ್ಲದ ಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಶಿವಶರಣ ಮಾದಾರ ಚೆನ್ನಯ್ಯನವರು ಹನ್ನೆರಡನೆಯ ಶತಮಾನದಲ್ಲಿ ನಡೆದ ಅಭೂತಪೂರ್ವ ಕ್ರಾಂತಿ ವರ್ಗ ವರ್ಣ ಲಿಂಗ ಬೇಧ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಜಗತ್ತಿನ ಸರ್ವ ಶ್ರೇಷ್ಠ ಕ್ರಾಂತಿಯಾಗಿದೆ. ಬಸವಣ್ಣನವರ ನೇತೃತ್ವದಲ್ಲಿ ನಡೆದ ಈ ಆಂದೋಲನದಲ್ಲಿ ಸಮಾಜದ ಅತ್ಯಂತ ಕಟ್ಟ ಕಡೆಯ ಮಾದಿಗ ಸಮುದಾಯದ ಚೆನ್ನಯ್ಯನು ಪಾಲ್ಗೊಂಡಿದ್ದನು. ಶಿವಶರಣ ಮಾದಾರ ಚೆನ್ನಯ್ಯನವರು 12ನೆಯ ಶತಮಾನದ ಅತ್ಯಂತ ಪ್ರಮುಖ ಶಿವಶರಣ, ಕಾಯಕಯೋಗಿ ಹಾಗೂ ಕನ್ನಡ ಸಾಹಿತ್ಯದ ಆದ್ಯ ವಚನಕಾರರಾಗಿದ್ದಾರೆ. ಭಕ್ತಿ ಮತ್ತು ಕಾಯಕ ನಿಷ್ಠೆಗೆ ಮೇರು ಶಿಖರವಾಗಿದ್ದ ಇವರನ್ನು ಜಗದ್ಗುರು ಬಸವಣ್ಣನವರೇ ತಮ್ಮ ವಚನಗಳಲ್ಲಿ ಅತ್ಯಂತ ಪೂಜ್ಯಭಾವದಿಂದ ಕೊಂಡಾಡಿದ್ದಾರೆ.  ಮಾದಾರ ಚೆನ್ನಯ್ಯನವರ ಜೀವನ ಚರಿತ್ರೆಯ ಸಮಗ್ರ ವಿವರ ಇಲ್ಲಿದೆ: ಪರಿಚಯ ಮತ್ತು ಹಿನ್ನೆಲೆ ಕಲ್ಯಾಣಕ್ಕೆ ಬಂದ ಮೇಲೆ ಮಾದಾರ ಚೆನ್ನಯ್ಯ ಎಲ್ಲಾ ಶರಣರಿಗೂ ಅಂಬಲಿ ಮಾಡಿ ಕೊಡುತ್ತಿದ್ದರು. ಭಕ್ತಿ ಮತ್ತು ಶಿವನಿಗೆ ಅಂಬಲಿ ಉಣಿಸಿದ ಪ್ರಸಂಗ ಕಾಲ್ಪನಿಕ ಕಥೆ  ಚೆನ್ನಯ್ಯನವರು ಕಾಡಿಗೆ ಹೋಗಿ ಹುಲ್ಲು ಕೊಯ್ಯುವ ಕಾಯಕದಲ್ಲಿ ತೊಡಗಿದ್ದಾಗಲೂ ಇಷ್ಟಲಿಂಗ ಧ್ಯಾನದಲ್ಲಿ ಮಗ್ನರಾಗಿರುತ್ತಿದ್ದರು. ಅವರ ನಿಷ್ಕಲ್ಮಶ ಭಕ್ತಿಗೆ ಮೆಚ್ಚಿದ ಶಿವನು ಪ್ರತ್ಯಕ್ಷನಾಗಿ, ಚೆನ್ನಯ್ಯನ ಪತ್ನಿ ತಯಾರಿಸಿದ ಅಂಬಲಿ (ರಾಗಿ ಕೂಳು) ಯನ್ನು ಪ್ರತಿದಿನ ಬಂದು ಸ್ವೀಕರಿಸುತ್ತಿದ್ದನು ಎನ್ನುವ ಪುರಾಣ  ಕಾವ್ಯಗಳು ವರ್ಣಿಸುತ್ತವೆ. ಆದರೆ ಇವುಗಳನ್ನು ತಾತ್ವಿಕ ಚಿಂತನೆಗೆ ಚೆನ್ನಯ್ಯನ ಬದ್ಧತೆ ಸೈದ್ಧಾಂತಿಕ ಸ್ಪಷ್ಟತೆ ನಿಲುವುಗಳ ಬಗ್ಗೆ ಆಶಯ ಎಂದು ಪರಿಗಣಿಸ ಬೇಕು. ಒಮ್ಮೆ ಚೋಳರಾಜನು ತಾನು ಸಿದ್ಧಪಡಿಸಿದ ಮೃಷ್ಟಾನ್ನ ಭೋಜನವನ್ನು ಶಿವನು ಸ್ವೀಕರಿಸದಿದ್ದಾಗ, ಶಿವನಿಗೆ ಕಾರಣ ಕೇಳಿದನು. ಆಗ ಶಿವನು, “ನಾನು ಪ್ರತಿದಿನ ನನ್ನ ಭಕ್ತ ಚೆನ್ನಯ್ಯನ ಅಂಬಲಿಯನ್ನು ಸವಿಯುತ್ತಿದ್ದೇನೆ, ನಿನ್ನ ರಾಜ ವೈಭವದ ಊಟಕ್ಕಿಂತ ಅವನ ಪ್ರೀತಿಯ ಕೂಳೇ ನನಗೆ ಶ್ರೇಷ್ಠ” ಎಂದು ಹೇಳಿದನು. ಈ ಮೂಲಕ ಶಿವನು ಜಗತ್ತಿಗೆ ಚೆನ್ನಯ್ಯನ ಗುಪ್ತ ಭಕ್ತಿಯನ್ನು ಪ್ರಕಟಪಡಿಸಿದನು ಎಂಬ ಪವಾಡ ಕಥೆಗಳಿವೆ. ಕಲ್ಯಾಣ ಕ್ರಾಂತಿ ಮತ್ತು ಬಸವಣ್ಣನವರ ಒಡನಾಟ ಬಸವಣ್ಣನವರ ಸಾಮಾಜಿಕ ಕ್ರಾಂತಿ ಮತ್ತು ಶರಣರ ಅನುಭವ ಮಂಟಪದ ಚಿಂತನೆಗಳಿಂದ ಆಕರ್ಷಿತರಾದ ಮಾದಾರ ಚೆನ್ನಯ್ಯನವರು ಕಲ್ಯಾಣಕ್ಕೆ (ಇಂದಿನ ಬಸವಕಲ್ಯಾಣ) ಬಂದರು. ಅಲ್ಲಿ ತಮ್ಮ ಮೂಲ ಕಾಯಕವಾದ ಪಾದರಕ್ಷೆ (ಚರ್ಮಗಾರಿಕೆ) ತಯಾರಿಕೆಯನ್ನು ಮುಂದುವರಿಸಿದರು. ಬಸವಣ್ಣನವರು ತಮ್ಮ ವಚನಗಳಲ್ಲಿ “ಎನ್ನ ದೆಸೆಯಿಂದ ಮಾದಾರ ಚೆನ್ನಯ್ಯನ ಮನೆಯು …” ಎಂದು ಹೇಳಿಕೊಳ್ಳುತ್ತಾ, ಚೆನ್ನಯ್ಯನವರನ್ನು ತಮಗಿಂತ ಶ್ರೇಷ್ಠ ಭಕ್ತರೆಂದು ಗೌರವಿಸುತ್ತಿದ್ದರು. ಮಾದಾರ ಚೆನ್ನಯ್ಯನ ಮನೆಯಲ್ಲಿ ಉಂಡ ಕಾರಣ ವೇದ ನಡುನಡುಗಿತ್ತು ಎಂದು ಹೇಳಿದ್ದಾರೆ ಬಸವಣ್ಣನವರು. ವಚನ ಸಾಹಿತ್ಯ ಮತ್ತು ವೈಚಾರಿಕತೆ ಸಮಾಜದ ಅಸಮಾನತೆ ಹಾಗೂ ಮೌಢ್ಯತೆಯ ವಿರುದ್ಧ ಧ್ವನಿ ಎತ್ತಿದ ಮಾದಾರ ಚೆನ್ನಯ್ಯನವರ ಪ್ರಮುಖ ವಚನಗಳು ಮತ್ತು ಅವುಗಳ ಭಾವಾರ್ಥಗಳು ಇಲ್ಲಿವೆ: 1. ನಡೆ ಮತ್ತು ನುಡಿಯ ಪ್ರಾಮುಖ್ಯತೆ (ಆಚಾರವೇ ಕುಲ) “ಆಚಾರವೆ ಕುಲ, ಅನಾಚಾರವೆ ಹೊಲೆ” ಎಂಬ ವಚನದಲ್ಲಿ, ಕೇವಲ ಒಳ್ಳೆಯ ಮಾತುಗಳನ್ನಾಡಿ ಕೆಟ್ಟ ನಡವಳಿಕೆ ಹೊಂದಿದ್ದರೆ ಅದುವೇ ‘ಹೊಲೆ’ (ಮೈಲಿಗೆ) ಎಂದು ಚೆನ್ನಯ್ಯನವರು ಸ್ಪಷ್ಟಪಡಿಸುತ್ತಾರೆ. ಕಾಯಕನಿಷ್ಠೆಯು ನಡೆ-ನುಡಿಯ ಸಮಾನತೆಯಲ್ಲಿದೆ ಎಂದು ಪ್ರತಿಪಾದಿಸಿ, ಆಚಾರವೇ ನಿಜವಾದ ಶ್ರೇಷ್ಠ ಕುಲ ಎಂದು ಒತ್ತಿ ಹೇಳುತ್ತಾರೆ.  2. ಸಾಮಾಜಿಕ ಸಮಾನತೆ ಮತ್ತು ಜಾತಿ ಪದ್ಧತಿಯ ಖಂಡನೆ ಸಮಾಜದಲ್ಲಿನ ಹದಿನೆಂಟು ಜಾತಿಗಳ ಭೇದವನ್ನು ತಳ್ಳಿಹಾಕುವ ಅವರು, ಮನುಷ್ಯರ ನಡುವಿನ ಅಸಮಾನತೆಯನ್ನು ಖಂಡಿಸುತ್ತಾರೆ. ಹುಟ್ಟಿನಿಂದ ಯಾರೂ ಕೀಳು ಅಥವಾ ಮೇಲಲ್ಲ, ಕಾಯಕದ ಆಧಾರದ ಮೇಲೆ ಕೇವಲ ಕೆಲಸದ ವಿಂಗಡಣೆಯಷ್ಟೇ ನಡೆದಿದೆ. ಸತ್ಯ ಮತ್ತು ಬ್ರಹ್ಮವನ್ನು ಅರಿತವನೇ ನಿಜವಾದ ಬ್ರಾಹ್ಮಣ ಎಂಬ ವಿಚಾರವನ್ನು ಇವರು ವಚನಗಳಲ್ಲಿ ಮಂಡಿಸಿದ್ದಾರೆ.  3. ಬಾಹ್ಯ ಪೂಜೆ ಮತ್ತು ಆತ್ಮಜ್ಞಾನ ದೇಹವಿರುವ ತನಕ ಕರ್ಮ-ಪೂಜೆಗಳು ಮುಖ್ಯವಾದರೂ, ನಿಜವಾದ ಮುಕ್ತಿ ಸಿಗುವುದು ಬಾಹ್ಯ ಕ್ರಿಯೆಗಳಿಂದಲೋ ಅಥವಾ ಆತ್ಮಜ್ಞಾನದಿಂದಲೋ ಎಂಬ ಜಿಜ್ಞಾಸೆಯನ್ನು ವಚನಗಳಲ್ಲಿ ವ್ಯಕ್ತಪಡಿಸುತ್ತಾರೆ. ಕಾಯದ ಕರ್ಮಕ್ಕಿಂತ ಆತ್ಮಜ್ಞಾನವೇ ಮುಖ್ಯ ಎಂಬುದನ್ನು ಒತ್ತಿಹೇಳಿ, ಭಕ್ತಿಯ ಮಾರ್ಗವನ್ನು ಪ್ರಾರ್ಥಿಸುತ್ತಾರೆ.  ವಚನಗಳ ವೈಶಿಷ್ಟ್ಯ: ಇವರ ಸಮಾಧಿ ಚಾಮರಾಜನಗರ ಜಿಲ್ಲೆಯ ತಮಿಳುನಾಡಿಗೆ ಅಂಟಿಕೊಂಡ ಕುರುಬಗಟ್ಟಿಯಲ್ಲಿ ಕಾಣ ಬಹುದು ಕರ್ನಾಟಕ ಸರ್ಕಾರವು ಇವರ ಕಾಯಕ ನಿಷ್ಠೆ ಮತ್ತು ಸಮಾಜ ಸುಧಾರಣೆಯ ನೆನಪಿಗಾಗಿ ಪ್ರತಿ ವರ್ಷ ಮಾದಾರ ಚೆನ್ನಯ್ಯ ಜಯಂತಿಯನ್ನು ಆಚರಿಸುತ್ತದೆ. ______________________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ 

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ- “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ- ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಕದಿರ ರೆಮ್ಮವ್ವೆ  -ಅವಿರಳ ವಚನಕಾರ್ತೆ. ಅವಳು ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನ ಕ್ರಾಂತಿಯಲ್ಲಿ   ಪಾಲ್ಗೊಂಡು ರಾಟಿಯಿಂದ ಕದಿರು ತೆಗೆದು ನೂಲುವ ಕಾಯಕದವಳಾಗಿದ್ದವಳು.ತೆಗೆದ ನೂಲನ್ನು ಮಾರಿ ಬಂದ ಹಣದಲ್ಲಿ ಗುರು ಲಿಂಗ ಜಂಗಮ ದಾಸೋಹ ಮಾಡಿ ಬದುಕಿದಳು..ಬಹುತೇಕರು ಈಕೆಯ ಕಾಲವನ್ನು ಬಸವಾದಿ ಪ್ರಮಥರ ಕಾಲವೆಂದು ನಿರ್ಣಯಿಸುತ್ತಾರೆ . ಡಾ ಎಲ್ ಬಸವರಾಜು ಅವರು ಇವಳ ವಚನದಲ್ಲಿ ಬರುವ “ಪರದಳ  ವಿಭಾಡ”  “ಗಜವೇಂಟೆಕಾರ ” ಎಂಬ ಪದಗಳನ್ನು ಗಮನಿಸಿ ಇವಳು ವಿಜಯನಗರದ 1430  ಕಾಲದ ವಚನಕಾರ್ತೆ ಎಂದು ತೀರ್ಮಾನಿಸುತ್ತಾರೆ. ಆದರೆ ಹರಿಹರ ತನ್ನ ರಗಳೆಯಲ್ಲಿ ಕದಿರ ರೆಮ್ಮವ್ವೆಯನ್ನು ಸ್ಮರಿಸಿದ್ದಾನೆ. ಪಾಲ್ಗುರಿಕೆ ಸೋಮನಾಥನು ತನ್ನ ಪಂಡಿತಾರಾಧ್ಯ ಚರಿತ್ರೆಯಲ್ಲಿ ಕದಿರ ರೆಮ್ಮವ್ವೆ ಶರಣೆಯ  ಉಲ್ಲೇಖವಿದೆ. ಅಲ್ಲದೆ ಕದಿರು ಕಾಯಕದ ಕದಿರ ರೆಮ್ಮವ್ವೆಯ ಒಂದು ವಚನದಲ್ಲಿ ಬಸವಣ್ಣ ,ಚೆನ್ನ ಬಸವಣ್ಣ ಪ್ರಭುದೇವರನ್ನು ಸ್ಮರಿಸಿದ್ದಾಳೆ.ಶರಣರ ವಚನಗಳ ಜೊತೆ ಈಕೆಯ ವಚನಗಳು ಮತ್ತು ಸಕಲ ಪುರಾತನರ ವಚನಗಳು ಹಾಗು ಇತರ ಸ್ಥಲ ಕಟ್ಟಿನ ವಚನಗಳಲ್ಲಿ ಸಮಾವೇಶಗೊಂಡಿರುವುದು ಕದಿರು ರೆಮವ್ವೆ  ಬಸವ ಕಾಲಿನ ಶರಣೆ ಎನ್ನಲು ಹೆಚ್ಚು ಪುಷ್ಟಿ ಸಿಗುತ್ತವೆ. 1620  ರ ಶಂಕರ ದೇವನ “ಇಷ್ಟಲಿಂಗ ಚಾರಿತ್ರ್ಯ ” ಅಜ್ಞಾತ ಕವಿಯ   “ನೂರೆಂಟು ಶರಣೆಯರ ಅಷ್ಟಕ “ದಲ್ಲಿ ಕದಿರ ರೆಮ್ಮವ್ವೆ ಯ ಉಲ್ಲೇಖ ಕಂಡು ಬಂದಿದೆ. ಹೀಗಾಗಿ  ಕದಿರ ರೆಮ್ಮವ್ವೆ ಹನ್ನೆರಡನೆಯ ಶತಮಾನದ ಬಸವಾದಿ ಪ್ರಮಥರ ಸಂಕುಲಕೆ ಸೇರಿದ ಶರಣೆ ಎಂದು ಗಟ್ಟಿಯಾಗಿ ನಿರ್ಧರಿಸಬಹುದು.. ಕದಿರ ರೆಮ್ಮವ್ವೆ  ಒಬ್ಬ ನಿಷ್ಠಾವಂತ ನೇಕಾರ ಕುಟುಂಬದ ಕಾಯಕಜೀವಿ. ರಾಟಿಯಿಂದ ನೂಲು ತೆಗೆಯುವುದು ,ನೂಲನ್ನು ಮಾರಿ ಬಂದ ಆದಾಯದಿಂದ ಜಂಗಮ ಸೇವೆ ಕೈಗೊಳ್ಳುವ ಸತ್ಯ ಶುದ್ಧ ಶರಣೆ.ಇವಳ ಗಂಡನ ಬಗ್ಗೆ ಯಾವುದೇ ದಾಖಲೆಗಳಿಲ್ಲ . ಅವಳು ತನ್ನ ಕಾಯಕದ ಜೊತೆಗೆ ನಿತ್ಯ ಅನುಭಾವದ ಗೋಷ್ಠಿಯಲ್ಲಿ ಪಾಲ್ಗೊಂಡು ಲೌಕಿಕ ಪಾರಮಾರ್ಥಿಕ ಚಿಂತನೆಗಳಲ್ಲಿ ಭಾಗವಹಿಸುತ್ತಿದ್ದಳು.ಅವಳ ಎರಡು ವಚನದಲ್ಲಿ ನಿರಾಕಾರದ ಗಂಡನ ಬಗ್ಗೆ ಒಲವು ತೋರಿಸಿದನ್ನು ನೋಡಿದರೆ ಅವಳು ಅವಿವಾಹಿತೆಯಾಗಿರಬಹುದು ಎಂದು ನನ್ನ ಗ್ರಹಿಕೆಯಾಗಿದೆ. ಕದಿರ ರೆಮ್ಮವ್ವೆ  ನಾಲ್ಕು ವಚನಗಳು ಮಾತ್ರ ದೊರೆತಿವೆ.” ಕದಿರ ರೆಮ್ಮಿವೊಡೆಯ  ಗುಮ್ಮೆಶ್ವರ ” ನಾಲ್ಕು ವಚನಗಳಲ್ಲಿ ಎರಡುವಚನಗಳು  ಸತಿ ಪತಿ ದಾಂಪತ್ಯ ಧರ್ಮಕ್ಕೆ ಸಂಬಂಧ ಪಟ್ಟ ಅಲೌಕಿಕ ವಿಚಾರಗಳು ,ಒಂದು ವಚನದಲ್ಲಿ ಶರಣರ ಸ್ತುತಿ ಕಂಡು ಬಂದಿದೆ. ಇನ್ನೊಂದರಲ್ಲಿ ಕಾಯಕದ ಮಹತ್ವ ಅಡಕವಾಗಿದೆ. ಎನ್ನ ಸ್ಥೂಲ ತನುವೆ ಬಸವಣ್ಣನಯ್ಯಾ  ಎನ್ನ ಸೂಕ್ಷ್ಮ ತನುವೆ ಚೆನ್ನ ಬಸವಣ್ಣನಯ್ಯ  ಎನ್ನ ಕಾರಣ ತನುವೆ ಪ್ರಭುದೇವರಯ್ಯಾ  ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ  ಕದಿರ ರೆಮ್ಮಿಯೊಡೆಯ   ಗುಮ್ಮೆಶ್ವರಾ-  ಎನ್ನುವಲ್ಲಿ   ಕದಿರ ರೆಮ್ಮವ್ವೆ  -ತನ್ನ ವಚನದಲ್ಲಿ ಬಸವಣ್ಣ ತನ್ನ ಸ್ಥೂಲ ಶರೀರದ ಗುರುತು. ತನ್ನ ಆಕಾರ ಅನುಭಾವದ ತನುವು. ತನಗೆ ಶರಣೆಯ ಮುದ್ರೆಯನ್ನೊತ್ತಿದ ಬಸವಣ್ಣನು ತನ್ನ ಸ್ಥೂಲ ಶರೀರಕ್ಕೆ ತನುವಾಗುತ್ತಾನೆ ಎಂದು ಹೇಳುತ್ತಾ ಬಸವಣ್ಣನವರ ಕಲ್ಯಾಣ ಸಮತೆಯ ಕ್ರಾಂತಿಯಲ್ಲಿ ಕದಿರ ರೆಮ್ಮವ್ವೆಗೆ ಸ್ಥಾನ ದೊರಕಿಸಿ  ತನ್ನ ಕಾಯ ಶರೀರದ ಸ್ಥೂಲ ತನುವಾದವರು ಬಸವಣ್ಣ ಎಂದು ಅಭಿಮಾನದಿಂದ ಹೇಳುತ್ತಾಳೆ. ಇನ್ನು ತನ್ನ ಸೂಕ್ಶ್ಮ ಶರೀರದ ಕಣ್ಣಿಗೆ ಕಾಣದ ಭಾವ ಸೂಕ್ಷ್ಮತೆಯ ತನುವು ಚೆನ್ನ ಬಸವಣ್ಣ, ಚೆನ್ನಬಸವಣ್ಣನವರ ಷಟಸ್ಥಲ ಅರಿವಿನ ಜ್ಞಾನ ಸ್ಥೂಲ ಶರೀರದ ಮನೋ  ವಿಕಸನಕೆ ಕಾರಣವು. ಇಂತಹ ಸೂಕ್ಷ್ಮ ಶರೀರದ ತನುವು ಚೆನ್ನ ಬಸವಣ್ಣ . ಅದೇ ರೀತಿ ಶರೀರ ಪ್ರಾಣ ಆತ್ಮವು ಕ್ರಮವಾಗಿ  ಸ್ಥೂಲ ,ಸೂಕ್ಷ್ಮ ಕಾರಣವಾಗಿ ತನ್ನ ಆತ್ಮದ ಕಾರಣ ತನುವಿಗೆ ಅಲ್ಲಮರು ಕಾರಣ ಎಂದು ಹೇಳುತ್ತಾ ತನ್ನನ್ನು ಅಲ್ಲಮರ ಆಪ್ತವಲಯದಲ್ಲಿ ಗುರುತಿಸಿಕೊಳ್ಳುತ್ತಾಳೆ. ಕದಿರ ರೆಮ್ಮವ್ವೆ ತನ್ನ ಕಾಯಕದ ಬಗ್ಗೆ ಹೆಮ್ಮೆಯಿಂದ ಹೇಳುತ್ತಾಳೆ. ನಾ ತಿರುಹುವ ರಾಟೆಯ ಕುಲಜಾತಿಯ ಕೇಳಿರಣ್ಣಾ : ಅಡಿಯ ಹಲಗೆ ಬ್ರಹ್ಮ ,ತೋರಣ ವಿಷ್ಣು  ನಿಂದ ಬೋಂಬೆ ಮಹಾರುದ್ರ  ರುದ್ರನ ಬೆಂಬಳಿಯವೆರಡು ಸೂತ್ರ ಕರ್ಣ . ಅರಿವೆಂಬ ಕದಿರು ,ಭಕ್ತಿಯೇನೆಂಬ ಕೈಯಲ್ಲಿ ತಿರುಹಲಾಗಿ ಸುತ್ತಿತ್ತು ನೂಲು ಕದಿರು ತುಂಬಿತ್ತು. ರಾಟೆಯ ತಿರುಹಲಾರೆ -ಎನ್ನ ಗಂಡ ಕುಟ್ಟಿಹ ಇನ್ನೇವೆ  ” ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ  “? ಇದು ತನ್ನ ಬದುಕಿಗೆ ಸಂಬಂಧ ಪಟ್ಟ ಕಾಯಕದ ವಚನವಾಗಿದೆ. ಮೇಲ್ನೋಟಕ್ಕೆ ಇದು ಕಾಯಕದ ವಚನವಾದರೂ ಈ ವಚನದಲ್ಲಿ ಅತ್ಯಂತ ಪಾರಮಾರ್ಥಿಕ ಅರ್ಥವನ್ನು ಕದಿರು ರೆಮ್ಮವ್ವೆ ವ್ಯಕ್ತ ಪಡಿಸಿದ್ದಾಳೆ .ಕದಿರ  ರೆಮ್ಮವ್ವೆ ತನ್ನ ಕುಲ ಕಸುಬು ಹಾಗು ಕೀಳು ಜಾತಿಯ ಉಲ್ಲೇಖ ಮಾಡಿದ್ದಾಳೆ. ಜೊತೆಗೆ ತಿರುಹುವ ರಾಟಿಗೆ ಅದರ ಅಡಿಯ ಹಲಗೆ ಬ್ರಹ್ಮ ಅದಕ್ಕೆ ಕಟ್ಟಿದ ತೋರಣವೇ ವಿಷ್ಣು ,ರಾಟೆಗೆ ಕಟ್ಟಿದ ಬೋಂಬೆ ಮಹಾರುದ್ರ ರುದ್ರನ ಬೆಂಬಲಕೆ ಎರಡು ಸೂತ್ರ ಕರ್ಣಗಳು .ಇಂತಹ ರಾಟೆಯಿಂದ ನೂತಾಗ ಹೊರಡುವ ಅರಿವೇ ಕದಿರು..ಭಕ್ತಿಯಿಂದ ತಿರುಹಲಾಗಿ ನೂಲು ಸುತ್ತಿಕೊಂಡಿತ್ತು,ಮತ್ತು ಕದಿರು ತುಂಬಿತ್ತು . ಕದಿರ ತುಂಬಿದ ಮೇಲೆ ಮತ್ತೆ ರಾಟೆಯ ತಿರುಹಲಾರೆ.ಇಲ್ಲಿ ಬ್ರಹ್ಮ ವಿಷ್ಣು ರುದ್ರ ಮಹಾರುದ್ರ ಎಂಬ ದೈವೀ ಕಲ್ಪನೆಯನ್ನೇ ತಾನು ನೂಲುವ ಕದಿರಿನ  ಹಲಗೆಯನ್ನು ಬ್ರಹ್ಮವೆಂತಲೂ ,ಕಾರಣ ಹಲಗೆ ಗಟ್ಟಿಯಾಗಿದ್ದರೆ ತಾನಷ್ಟೇ ಕದಿರು ತೆಗೆಯುವವರು ಅದರ ಮೇಲೆ ಕುಳಿತು ನೂಲಬಹುದು ಅದು ಕದಿರಿನ    ಉತ್ಪತ್ತಿಯ ಆರಂಭ  (ಸೃಷ್ಟಿ ).ಅದೇ ರೀತಿ ಕದಿರಿಗೆ ಕಟ್ಟುವ ತೋರಣವು ವಿಷ್ಣು -ಇದು ಸ್ಥಿತಿ ಪ್ರಜ್ಞೆಯಾಗಿದೆ. ಲಯದ ಸಂಕೇತವಾದ ರುದ್ರನು ಕದಿರಿನ ಹೆಮ್ಮೊಳೆ-ಲೋಹದ ತುಂಡು ಕದಿರು ತೆಗೆಯುವ ಸಾಧನ. (spikes ) .ಇಲ್ಲಿಂದ ಉತ್ಪತ್ತಿಯಾಗುವ ಅರಿವೇ ಕದಿರು .ಭಕ್ತಿಯ ಕೈಯಲ್ಲಿ ರಾಟಿ ತಿರುಹಲಾಗಿ  ನೂಲು ಸುತ್ತಿಕೊಳ್ಳಹತ್ತಿತು ಮತ್ತು ಕದಿರು ತುಂಬಿ ಬಿಟ್ಟಿತು. ಪ್ರಾಪಂಚಿಕ ಪಾರಮಾರ್ಥಿಕ ನಿಲುವುಗಳನ್ನು ಸಮನ್ವಯಿಸುವ  ಪ್ರಯತ್ನ ಇದಾಗಿದೆ..ಅಗತ್ಯಕ್ಕಿಂತ ಹೆಚ್ಚಿನ ಆದಾಯ ತಿರಸ್ಕರಿಸಿದ ಶರಣೆ ರೆಮ್ಮವ್ವೆ ಹಾಗೇನಾದರೂ ಹೆಚ್ಚಿಗೆ ಕದಿರ ತೆಗೆದು ಆದಾಯಮಾಡಿಕೊಂಡರೆ ತನ್ನ ಲಿಂಗವೆಂಬ ಗಂಡ ತನ್ನನ್ನು ಕುಟ್ಟಿಹ ಶಿಕ್ಷಿಸುವ ಎಂದು ತನ್ನನ್ನು ತಾನೇ ಎಚ್ಚರಿಸಿಕೊಳ್ಳುತ್ತಾಳೆ.ತನ್ನ ಸಾಂಸಾರಿಕ ಬದುಕಿನಲ್ಲಿ ಪಾರಮಾರ್ಥಿಕ ಚಿಂತನೆ ಮಾಡುತ್ತಾ ಜೀವನ ಸಾಗಿಸಿದ ದಿಟ್ಟ ಶರಣೆ ಕದಿರ ರೆಮ್ಮವ್ವೆ. “  ಕದಿರು ರೆಮ್ಮವ್ವೆ – ಎರಡು ವಚನಗಳು ತನ್ನ ಪ್ರಾಪಂಚಿಕ ಬದುಕಿನ ಕುರಿತಾಗಿ ಎಂದು ಮೇಲು ನೋಟಕ್ಕೆ ಕಂಡರೂ ಅದರ ಹಿಂದಿನ ಆಧ್ಯಾತ್ಮಿಕ ಬೆಡಗನ್ನು ರೆಮ್ಮವ್ವೆ ಸೊಗಸಾಗಿ ವರ್ಣಿಸಿದ್ದಾಳೆ. ನಿರಾಕಾರ ಚೈತನ್ಯವೇ ತನ್ನ ಗಂಡವೆಂದು ಅಕ್ಕ ಮಹಾದೇವಿಯ ಹಾಗೆ ನಿರೂಪಿಸಿದ ವಚನಗಳ ಕಾಣಬಹುದು. ಎಲ್ಲರ ಹೆಂಡಿರು ತೊಳಸಿಕ್ಕುವರು;   ಎನ್ನ ಗಂಡಂಗೆ ತೊಳಸುವುದಿಲ್ಲ.   ಎಲ್ಲರ ಗಂಡಂದಿರಿಗೆ ಬಸಿವರು;   ಎನ್ನ ಗಂಡಂಗೆ ಬಸಿವುದಿಲ್ಲ. ಎಲ್ಲರ ಗಂಡಂದಿರಿಗೆ ಬೀಜವುಂಟು;   ಎನ್ನ ಗಂಡಂಗೆ ಅಂಡದ ಬೀಜವಿಲ್ಲ.   ಎಲ್ಲರ ಗಂಡಂದಿರು ಮೇಲೆ;   ಎನ್ನ ಗಂಡ ಕೆಳಗೆ, ನಾ ಮೇಲೆ.   ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.  ಪ್ರತಿಯೊಬ್ಬ ಹೆಂಡತಿ ತಾನು ಪತಿಯ ದಾಸಿಯಾಗುವಳು .ಆದರೆ ಕದಿರ ರೆಮ್ಮವ್ವೆ ತಾನು ದಾಸಿಯಾಗುವದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾಳೆ.ಎಲ್ಲ ಗಂಡಂದಿರರಿಂದ ಹೆಂಡತಿ ಬಸಿರಾಗುವಳು.ಆದರೆ ತಾನು ತನ್ನ ಗಂಡನಿಗೆ ಕೇವಲ ಬಸಿರಾಗುವುದಕ್ಕೆ ಬದುಕಿಲ್ಲ ಎಂದಿದ್ದಾಳೆ. ತನ್ನ ಗಂಡ ಕೇವಲ ವಿಷಯಾದಿಗಳ ಹುಟ್ಟು ಸಾವಿಗೆ ಕಾರಣವಾಗುವ ವ್ಯಕ್ತಿಯಲ್ಲ ಎಂದು ನಿರೂಪಿಸಿದ್ದಾಳೆ.ಎಲ್ಲ ಗಂಡರಿಗೆ  ಉತ್ಪತ್ತಿಯ ಬೀಜವಿದೆ ಆದರೆ ತನ್ನ ಗಂಡನಿಗೆ ಅಂಡದ ಅಂದರೆ ಕೇವಲ ಉತ್ಪತಿಗೆ ಬೇಕಾದ ಬೀಜ (fertile )  ಇಲ್ಲವೆನ್ನುತ್ತಾಳೆ.ಎಲ್ಲರ ಗಂಡ ಮೇಲೆ ಎಂದು ಸಾರುವ ಭಾರತೀಯ ಮಹಿಳೆಯರಿಗೆ ಕದಿರ ರೆಮ್ಮವ್ವೆ  ಸವಾಲಾಗುತ್ತಾಳೆ.ತನ್ನ ಗಂಡ ಕೆಳಗೆ ತಾನು ಮೇಲೆ ಎಂದು ಹೆಮ್ಮೆಯಿಂದ ಹೇಳುವ ಕದಿರ ರೆಮ್ಮವ್ವೆ ತಾನು ಲಿಂಗ ಭೇದ ನಿರಾಕರಿಸಿ ನಿರಾಕಾರ ಸ್ವರೂಪದ ಸಾಕಾರದ ಲಿಂಗವೇ ತನ್ನ ಗಂಡ ಎಂದು ಹೇಳಿಕೊಳ್ಳುತ್ತಾಳೆ. ಎಲ್ಲರ ಗಂಡಂದಿರು ಪರದಳವಿಭಾಡರು;   ಎನ್ನ ಗಂಡ ಮನದಳವಿಭಾಡ.  ಎಲ್ಲರ ಗಂಡಂದಿರು ಗಜವೇಂಟೆಕಾರರು;   ಎನ್ನ ಗಂಡ ಮನವೇಂಟೆಕಾರ.   ಎಲ್ಲರ ಗಂಡಂದಿರು ತಂದಿಕ್ಕಿಸಿಕೊಂಬರು;   ಎನ್ನ ಗಂಡ ತಾರದೆ ಇಕ್ಕಿಸಿಕೊಂಬ.   ಎಲ್ಲರ ಗಂಡಂದಿರಿಗೆ ಮೂರು,   ಎನ್ನ ಗಂಡಂಗೆ ಅದೊಂದೆ;   ಅದೊಂದೂ ಸಂದೇಹ,ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.  ಕದಿರ ರೆಮ್ಮವ್ವೆ ತನ್ನ ಮತ್ತು ಇತರ ಭವಿಗಳ ಗಂಡಂದಿರ ಗುಣ ಸ್ವಭಾವಗಳನ್ನು ವಿವರಿಸುತ್ತಾ,ತನ್ನ ಗಂಡನಿಗೂ ಮತ್ತು ಇತರ ಮಹಿಳೆಯರ ಗಂಡಂದಿರರಿಗೂ   ಇರುವ ವ್ಯತ್ಯಾಸವನ್ನು ಮತ್ತೆ ಮತ್ತೆ ಕೆಣಕಿದ್ದಾಳೆ   . ಎಲ್ಲರ ಗಂಡಂದಿರರು ಪರರ ಅಳಲನ್ನು ವಿನಾಶ ಮಾಡಿದರೆ ,ತನ್ನ ಗಂಡ ತನ್ನ ಮನದ ಅಳಲನ್ನು ನಾಶ ಮಾಡುತ್ತಾನೆ .ಎಲ್ಲರ ಗಂಡರು ಆನೆಯನ್ನು ಭೇಟೆಯಾಡಿದರೆ. ತನ್ನ ಗಂಡ ವಿಷಯಾದಿಗಳನ್ನು ತುಂಬಿದ ಮನದ ಭೇಟೆಯಾಡುವವನು.ಉಳಿದ ಗಂಡಂದಿರರು ತಂದದ್ದನ್ನು ತಿನ್ನುವವರು .ತನ್ನ ಗಂಡ ತಾರದೆ ತಿನ್ನುವವನು.ಎಲ್ಲರ ಗಂಡಂದಿರರು ಸೃಷ್ಟಿ ಸ್ಥಿತಿ ಲಯ -ಸ್ಥೂಲ ಸೂಕ್ಷ್ಮ ಹಾಗು ಕಾರಣ ಶರೀರಕ್ಕೆ  ಅಂಟಿಕೊಂಡವ್ರು. ತನ್ನ ಗಂಡ ಮಾತ್ರ ಕಾರಣ ಶರೀರಕ್ಕೆ ನಿಂತ ಚೈತನ್ಯ ಚೇತನವೆನ್ನುತ್ತಾಳೆ ಕದಿರ ರೆಮ್ಮವ್ವೆ.. ತುಂಬಾ ಗಹನವಾದ ವಿಷಯವನ್ನು ಸಲೀಲಾಗಿ ಹೇಳುವ ಶರಣೆಯ ವಚನದಲ್ಲಿ ಅಕ್ಕ ಮಹಾದೇವಿಯ ಚೆನ್ನ ಮಲ್ಲಿಕಾರ್ಜುನನ್ನು ನೆನಯುವ ಧ್ವನಿ ಧೋರಣೆ ಎದ್ದು ಕಾಣುತ್ತದೆ.ಕದಿರ ರೆಮ್ಮವ್ವೆಯ ವಚನಗಳಲ್ಲಿ ತಾನು ಪ್ರಾಪಂಚಿಕ ಬದುಕಿಗೆ  ಮಾತ್ರ ಸೀಮಿತವಲ್ಲ ತಾನು ಆಧ್ಯಾತ್ಮಿಕ ಪಾರಮಾರ್ಥಿಕ ಸುಖವನ್ನು ಉಣ್ಣಲು ಬಂದವಳು ಎಂದಿದ್ದಾಳೆ. ಹೀಗೆ ಲಿಂಗ ಭೇದವಳಿದು ತಾನೇ ಲಿಂಗವಾದ ಬಗೆಯನ್ನು ಅರ್ಥಪೂರ್ಣವಾಗಿ ವಿವರಿಸಿದ ಅತ್ಯಂತ ಜ್ಞಾನಿ ಅವಿರಳ ವಚನಕಾರ್ತೆ   ಕದಿರ ರೆಮ್ಮವ್ವೆ . ಕದಿರ ರೆಮ್ಮವ್ವೆಯ ಸಿಕ್ಕ ನಾಲ್ಕು ವಚನಗಳು ಅತ್ಯಂತ ಉತ್ಕೃಷ್ಟ ಚಿಂತನೆಯಿಂದ ಕೂಡಿವೆ.ಅವಳ ವಚನದ ಅಂಕಿತವು ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ”. ಗುಮ್ಮೆಶ್ವರ-ಇದು ಗುಹೇಶ್ವರ  ಅಂಕಿತದ ಸಾಮ್ಯತೆ ಇದ್ದು  ಪಾಠಾಂತರ   ಸಮಯದಲ್ಲಿ ಇದು ಗುಮ್ಮೆಶ್ವರ ಆದ ಎಲ್ಲಾ ಸಾಧ್ಯತೆಗಳಿವೆ. ಕದಿರ ರೆಮ್ಮವ್ವೆ ಅಲ್ಲಮ ಪ್ರಭುವಿನ ಗರಡಿಯಲ್ಲಿ ಬೆಳೆದಳವಳು . ತನ್ನ ಒಂದು ವಚನದಲ್ಲಿ ತಾನು ಗುರು ಅಲ್ಲಮರ ಕಾರುಣ್ಯವೆಂದು ಹೇಳಿಕೊಂಡಿದ್ದಾಳೆ. —– ಎನ್ನ ಕಾರಣ ತನುವೆ ಪ್ರಭುದೇವರಯ್ಯಾ         ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ .            ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ ಎಂದು ಹೇಳಿ ತನ್ನ ಗುರುವಿನ ಮೇಲಿನ ಅಭಿಮಾನ ಗೌರವ ಮತ್ತು ಪ್ರೀತಿಯನ್ನು ವ್ಯಕ್ತ ಪಡಿಸಿದ್ದಾಳೆ. ಈ ಕಾರಣದಿಂದ ಅವಳು ಅಲ್ಲಮ ಪ್ರಭುಗಳ ಆಪ್ತ ವಲಯದ ಸಹಾಯಕಿ, ಶಿಷ್ಯೆ ಎಂದು ಪರಿಗಣಿಸಬಹುದು. ನನ್ನ  ಈ ತರ್ಕಕ್ಕೆ ಗ್ರಹಿಕೆಗೆ ಇನ್ನೊಂದು ಕೆಲವು ಕಾರಣಗಳಿವೆ . ಅವುಗಳಲ್ಲಿ ಕಲ್ಯಾಣ ಕ್ರಾಂತಿಯ ಮೊದಲು ಮತ್ತು ನಂತರ ಕೆಲ ಶರಣರು ಕಲ್ಯಾಣವನ್ನು ತೊರೆದರು ಎಂದು ನಮಗೆ ತಿಳಿದು ಬರುತ್ತದೆ. ಹೀಗೆ ಕಲ್ಯಾಣ ರಕ್ತ ಕ್ರಾಂತಿಯ ಮೊದಲೆ ಕಲ್ಯಾಣ ತೊರೆದವರಲ್ಲಿ ಅಕ್ಕ ಮಹಾದೇವಿ  ಮತ್ತು  ಅಲ್ಲಮರು . ಚರಿತ್ರೆ ಇತಿಹಾಸದಲ್ಲಿ  ಲಭ್ಯವಿರುವ ಘಟನಗಳನ್ನಾಧರಿಸಿ ಶರಣರ ಮಾರ್ಗದ ಸಂಭಾವ್ಯತೆಯನ್ನು  ನಿರ್ಧರಿಸಲಾಯಿತು. ಕಳೆದ ಮೂವತ್ತು ವರ್ಷದಿಂದ ನಾನು ಶರಣರ ಸಮಾಧಿಗಳನ್ನು ಅತ್ಯಂತ ಕೂತಹಲದಿಂದ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಅಲ್ಲಮ ಪ್ರಭುಗಳು ತೇರದಾಳದಲ್ಲಿ ಐಕ್ಯರಾಗಿದ್ದಾರೆ ಅಲ್ಲಿ ಪ್ರಭುದೇವರ ಗದ್ದುಗೆ ಇದೆಯೆಂದು    ಚಿಕ್ಕ ಬಾಲಕನಿಂದಲೂ ಕೇಳಿಸಿಕೊಂಡು ಬಂದಿದ್ದೆ.ಆದರೆ ತೇರದಾಳದಲ್ಲಿ ಅಲ್ಲಮರು ಕಲ್ಯಾಣ ತೊರೆದನಂತರ ಕೆಲಕಾಲ ತಂಗಿದ್ದರು ಎಂದು ಮುಂದೆ ಶ್ರೀಶೈಲಕ್ಕೆ  ಹೋಗುತ್ತಾರೆ ಎಂದುತಿಳಿದು ಬರುತ್ತದೆ. ಅಲ್ಲಮ ಪ್ರಭುಗಳು ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ

ಸಾವಿಲ್ಲದ ಶರಣರು ಮಾಲಿಕೆ- “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣ ಸಂಗಾತಿ ಸಾವಿಲ್ಲದ ಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಶ್ರೇಷ್ಠ ಶಿವಯೋಗ ಸಾಧಕರು ಮಲೆ ಮಹದೇಶ್ವರ   ಹನ್ನೆರಡನೆಯ ಶತಮಾನದ ಶರಣರನ್ನು ಸಂತರನ್ನು ಹೊಂದಿರುವ ಕನ್ನಡದ ಈ ನೆಲದಲ್ಲಿ ಏಳು ಬೆಟ್ಟಗಳ ಮಲೆಯ ಮಹದೇಶ್ವರರು ಹುಟ್ಟಿ ಬರುತ್ತಾರೆ.  ಕರ್ನಾಟಕದ ಅತ್ಯಂತ ಪ್ರಸಿದ್ಧ ಮತ್ತು ಪವಿತ್ರ ಲಿಂಗಾಯತ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಇದು ದಕ್ಷಿಣ ತುದಿಯ ಗಡಿ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿದೆ.  ಜನಪದ ಕಾವ್ಯಗಳು ಮತ್ತು ಸ್ಥಳ ಪುರಾಣಗಳ ಪ್ರಕಾರ, ಶ್ರೀ ಮಲೆ ಮಹದೇಶ್ವರ ಸ್ವಾಮಿಯ ತಂದೆ ತಾಯಿಗಳ ವಿವರ   ತಂದೆ: ಚಂದ್ರಶೇಖರ ಮೂರ್ತಿ (ಕೆಲವು ಕಡೆ ಚಂದ್ರಶೇಖರ ಗುರುಗಳು ಎಂದೂ ಕರೆಯಲಾಗುತ್ತದೆ). ತಾಯಿ: ಉತ್ತರಾಜಮ್ಮ (ಕೆಲವು ಜನಪದ ಕಥೆಗಳ ಪ್ರಕಾರ ಇವರನ್ನು ಸುಗುಣಾದೇವಿ ಎಂದೂ ಗುರುತಿಸಲಾಗುತ್ತದೆ).ಹಿನ್ನೆಲೆ ಮತ್ತು ನಂಬಿಕೆಗಳು: ದೈವಿಕ ಜನನ: ಜನಪದ ಚರಿತ್ರೆಯ ಪ್ರಕಾರ, ಉತ್ತರಾಜಮ್ಮನಿಗೆ ದೀರ್ಘಕಾಲ ಮಕ್ಕಳಾಗದಿದ್ದಾಗ ಅವರು ಶಿವನನ್ನು ಕುರಿತು ತಪಸ್ಸು ಮಾಡುತ್ತಾರೆ. ಭಕ್ತಿಗೆ ಮೆಚ್ಚಿದ ಶಿವನು ಅವಳ ಕನಸಿನಲ್ಲಿ ಬಂದು ಗಂಡು ಸಂತಾನದ ವರವನ್ನು ನೀಡುತ್ತಾನೆ. ಅದರಂತೆ ಜನಿಸಿದ ಬಾಲಕನೇ ಮುಂದೆ ‘ಮಹದೇಶ್ವರ’ರಾಗಿ ಪ್ರಸಿದ್ಧಿ ಪಡೆದರು ಎಂಬ ಪ್ರತೀತಿ ಇದೆ. *ಅವತಾರ ಪುರುಷ: ಮಹದೇಶ್ವರರು ಯಾವುದೇ ಸಾಮಾನ್ಯ ಮಾನವನಂತೆ ಜನಿಸದೆ, ಲೋಕ ಕಲ್ಯಾಣಕ್ಕಾಗಿ ಭೂಮಿಗೆ ಬಂದ ಶ್ರೇಷ್ಠ ಚಿಂತಕ ಅನುಭವಿ. ಎಂಬುದು ಭಕ್ತರ ದೃಢ ನಂಬಿಕೆಯಾಗಿದೆ. ಅವರು ಸಣ್ಣ ವಯಸ್ಸಿನಲ್ಲೇ ಸಂಸಾರ ಮತ್ತು ಲೌಕಿಕ ಜೀವನವನ್ನು ತೊರೆದು ಆಧ್ಯಾತ್ಮಿಕ ಹಾದಿ ಹಿಡಿದರು.ಮಹದೇಶ್ವರ ಸ್ವಾಮಿಯ ಬಾಲ್ಯದ ಪವಾಡಗಳು ಅಥವಾ ಅವರು ಶ್ರೀಶೈಲದಿಂದ ಕರ್ನಾಟಕಕ್ಕೆ ಬಂದ ಇತಿಹಾಸದ ಬಗ್ಗೆ ಪುರಾಣ ಕಥನಗಳ ದಾಖಲೆಗಳಿವೆ. *ಹಿನ್ನೆಲೆ ಮತ್ತು ಸ್ಥಳ*  ಪುರಾಣಮಹದೇಶ್ವರ ಸ್ವಾಮಿ: 14-15ನೇ ಶತಮಾನದಲ್ಲಿ ಬಾಳಿ ಬದುಕಿದ ಪವಾಡ ಪುರುಷ ಹಾಗೂ ಶರಣ ಸಂಸ್ಕೃತಿಯ  ಸಂತ ಶ್ರೀ ಮಹದೇಶ್ವರರು ಸಾಕ್ಷಾತ್ ಶಿವನ ಅವತಾರ ಎಂದು ಅಲ್ಲಿನ ಜನಪದಿಗರು ನಂಬಿದ್ದಾರೆ. *ತಪೋಭೂಮಿ ಮತ್ತು ಮುಕ್ತಿ:*  ಮಹದೇಶ್ವರರು ಈ ಬೆಟ್ಟಗಳಲ್ಲಿ ತಪಸ್ಸು ಆಚರಿಸಿ, ಭಕ್ತರ ಕಷ್ಟಗಳನ್ನು ನಿವಾರಿಸಿ, ಕೊನೆಗೆ ಇಲ್ಲೇ ಲಿಂಗ ರೂಪದಲ್ಲಿ ಐಕ್ಯರಾದರು (ಸಮಾಧಿ ಹೊಂದಿದರು). ಹುಲಿ ವಾಹನ: ಜನಪದ ಕಾವ್ಯಗಳ ಪ್ರಕಾರ, ಬಾಲಯೋಗಿ ಮಹದೇಶ್ವರರು ಕಾಡಿನ ಹುಲಿಯನ್ನೇ ತಮ್ಮ ವಾಹನವಾಗಿಸಿಕೊಂಡು ಬೆಟ್ಟಗಳಲ್ಲಿ ಸಂಚರಿಸುತ್ತಿದ್ದರು.ಶ್ರವಣ ಸಂಹಾರ: ಈ ಭಾಗದಲ್ಲಿ ಜನರಿಗೆ ಹಿಂಸೆ ನೀಡುತ್ತಿದ್ದ ಕ್ರೂರ ರಾಜ ‘ಶ್ರವಣ’ನನ್ನು ಮಹದೇಶ್ವರರು ಸಂಹರಿಸಿ ಜನರನ್ನು ಮುಕ್ತಗೊಳಿಸಿದರು ಎಂಬ ಇತಿಹಾಸವಿದೆ. ಏಳು ಮಲೆಗಳು (ಬೆಟ್ಟಗಳು)ಮಲೆ ಮಹದೇಶ್ವರ ಕ್ಷೇತ್ರವು ಸಮುದ್ರ ಮಟ್ಟದಿಂದ ಸುಮಾರು 3,200 ಅಡಿ ಎತ್ತರದಲ್ಲಿದ್ದು, ದಟ್ಟವಾದ ಅರಣ್ಯದಿಂದ ಆವೃತವಾದ ಏಳು ಬೆಟ್ಟಗಳ ಸಾಲನ್ನು ಒಳಗೊಂಡಿದೆ: ಆನೆಮಲೆ ಜೇನುಮಲೆ ಕಾಡುಮಲೆ ಕಾನುಮಲೆ ಪೊನ್ನಾಚಿಮಲೆ ಪಾವಲಮಲೆ (ಪವಲಮಲೆ) ಪಚ್ಚೆಮಲೆ ಪ್ರಮುಖ ಆಕರ್ಷಣೆಗಳು ಮತ್ತು ವಿಶೇಷತೆಗಳುಲಿಂಗ ರೂಪದ ದರ್ಶನ: ದೇವಸ್ಥಾನದ ಗರ್ಭಗುಡಿಯಲ್ಲಿ ಮಹದೇಶ್ವರರು ಸ್ವಯಂಭೂ ಲಿಂಗ ರೂಪದಲ್ಲಿ ನೆಲೆಸಿದ್ದಾರೆ. ಅಂತರಗಂಗೆ: ಬೆಟ್ಟದ ಸಮೀಪವಿರುವ ಒಂದು ಪವಿತ್ರ ನೀರಿನ ಸೆಲೆ. ಇಲ್ಲಿ ವರ್ಷದ ಯಾವುದೇ ಋತುವಿನಲ್ಲೂ ನೀರು ಬತ್ತುವುದಿಲ್ಲ. ಭಕ್ತರು ಇಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆಯುತ್ತಾರೆ. ದೊಡ್ಡ ನಂದಿ ವಿಗ್ರಹ: ದೇವಾಲಯದ ಆವರಣದಲ್ಲಿ ಶಿವನ ವಾಹನವಾದ ನಂದಿಯ ಬೃಹತ್ ಮೂರ್ತಿಯಿದೆ. ಜಾನಪದ ಕಾವ್ಯ: ಮಲೆ ಮಹದೇಶ್ವರ ಕಾವ್ಯ ಅಥವಾ ತಂಬೂರಿ ಶೈಲಿಯ ಗಾಯನವು ಕರ್ನಾಟಕದ ಪ್ರಸಿದ್ಧ ಜಾನಪದ ಪರಂಪರೆಯಾಗಿದೆ. ಭಕ್ತರು ಇಂದಿಗೂ ಕಾಲ್ನಡಿಗೆಯ ಮೂಲಕ ಬೆಟ್ಟ ಹತ್ತುತ್ತಾ ಮಾದಪ್ಪನ ಕಥೆಗಳನ್ನು ಹಾಡುತ್ತಾರೆ. ಕಾಡಿನ ಸೋಲಿಗರು ಮತ್ತು ಇತರೆ ಬುಡಕಟ್ಟಿನ ಜನರಿಗೆ ಲಿಂಗ ಸಂಸ್ಕಾರ ನೀಡಿ ಕಾಯಕ ದಾಸೋಹ ಗುರು ಲಿಂಗ ಜಂಗಮ ತತ್ವಗಳನ್ನು ಪರಿಚಯಿಸಿದ ಸಾವಿಲ್ಲದ ಶ್ರೇಷ್ಠ ಶಿವಯೋಗ ಸಾಧಕರು ಮತ್ತು ಶರಣರು. ಬಸವ ಪರಂಪರೆಯ ಶ್ರೇಷ್ಠ ಚಿಂತಕರ ಬದುಕಿನ ತಿರುಳನ್ನು ಮೈಸೂರು ಚಾಮರಾಜನಗರ ಜಿಲ್ಲೆಯಲ್ಲಿ ತಿರುಗಾಡಿ ಬಸವ ತತ್ವ ಅಧ್ಯಯನ ಶಿವಯೋಗ ಸಾಧನೆಯನ್ನು ಅಲ್ಲಿನ ಬುಡಕಟ್ಟು ಮುಂತಾದ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಿದರು. ________________________’ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

Read Post »

You cannot copy content of this page

Scroll to Top