ಸ್ವತಂತ್ರ್ಯ ಹೋರಾಟಗಾರ್ತಿ ಉಷಾ ಮೆಹ್ತಾ – (1920-2000)
ಅಂಕಣ ಸಂಗಾತಿ ಗಜಲ್ ಲೋಕ ರಜಪೂತರ ಗಜಲ್ ನಾದದಲ್ಲೊಂದು ಸುತ್ತು … ಹಾಯ್…. ಏನು ಯೋಚಿಸ್ತಾ ಇದ್ದೀರಾ, ಇಂದು ಯಾವ ವಾರ ಎಂದೋ…? ನಾನು ಓರ್ವ ಗಜಲ್ ಗೋ ಅವರ ಪರಿಚಯದೊಂದಿಗೆ ಬಂದಿದ್ದೇನೆ ಎಂದರೆ ಇಂದು ‘ಗುರುವಾರ’ ಎಂದಲ್ಲವೇ…!! ಶುಭೋದಯ, ನನ್ನ ಎಲ್ಲ ಕಸ್ತೂರಿ ಕನ್ನಡದ ಹೃದಯಗಳಿಗೆ ಈ ಮಲ್ಲಿನಾಥನ ಮಲ್ಲಿಗೆಯಂತ ನಮಸ್ಕಾರಗಳು. “ಆ ಹೆಜ್ಜೆಗಳ ಸದ್ದನ್ನು ನಾವು ಬಹಳ ಮೊದಲೇ ತಿಳಿಯುತ್ತೇವೆ ಹೇಯ್ ಜೀವನವೇ..ನಾವು ನಿನ್ನನ್ನು ದೂರದಿಂದಲೇ ಗುರುತಿಸುತ್ತೇವೆ” –ಫಿರಾಕ್ ಗೋರಖಪುರಿ ‘ಜೇನು’ ಎಂದ ತಕ್ಷಣವೇ ನಮ್ಮ ಬಾಯಿಯು ಒದ್ದೆಯಾಗುತ್ತದೆ, ಅಲ್ಲವೆ..! ನಾವು ಜೇನು ಸವಿಯೋದು ರುಚಿಗಾಗಿಯಾದರೂ ಅದರ ಫಲ ಮಾತ್ರ ರುಚಿಯ ಆಚೆಗೆ ಇದೆ! ಆ ಜೇನಿನ ಮಕರಂದವು ನಮ್ಮ ದೇಹವನ್ನು ಪ್ರವೇಶಿಸಿ ರಕ್ತದ ಉತ್ಪತ್ತಿಗೆ ಕಾರಣವಾಗುತ್ತದೆ, ನಮ್ಮ ಸದೃಢ ಆರೋಗ್ಯಕ್ಕೆ ಬುನಾದಿಯಾಗುತ್ತದೆ. ಇದರಂತೆಯೇ ಸಾಹಿತ್ಯದಿಂದ ಮನೋರಂಜನೆ ದೊರೆಯುತ್ತದೆ ಎಂಬುದು ಮೇಲ್ನೋಟಕ್ಕೆ ದಿಟವೆನಿಸಿದರೂ ಸಾಹಿತ್ಯದ ಕರಾಮತ್ತು ಮನೋರಂಜನೆಯನ್ನು ದಾಟಿಕೊಂಡು ವ್ಯಕ್ತಿಯ ವ್ಯಕ್ತಿತ್ವದ ವಿಕಾಸಕ್ಕೆ, ಸಂಸ್ಕಾರಕ್ಕೆ ತಳಪಾಯ ಹಾಕುತ್ತದೆ, ಹಾಕುತ್ತಿದೆ ಕೂಡ! ಕಾಂತೆಯಂತೆ ಸಂತೈಸುತ್ತದೆ, ತಾಯಿಯಂತೆ ಜೋಗುಳವಾಡುತ್ತದೆ, ಇವಾಗಲೂ ಇದನ್ನೆ ಮಾಡುತ್ತಿದೆ! ಪ್ರತಿ ಭಾಷೆಯ ಬೇರುಗಳಲ್ಲಿ ಅಕ್ಷರದ ಅಕ್ಷಯ ಪಾತ್ರೆ ಇದೆ. ಇದು ಮನುಕುಲಕ್ಕೆ ಬೆಂಗಾವಲಾಗಿ, ಜ್ಯೋತಿಯಾಗಿ ಬೆಳಕನ್ನು ನೀಡಿದೆ, ನೀಡುತ್ತಿದೆ. ಕನ್ನಡದ ಹಣತೆಯು ಹಲವರ ಬೌದ್ಧಿಕ ಚಲನೆಯಿಂದ ದೇದಿಪ್ಯಮಾನವಾಗಿ ಪ್ರಕಾಶಿಸುತ್ತಿದೆ. ಇದಕ್ಕೆ ಅನ್ಯ ಭಾಷೆಯ ಸಾಹಿತ್ಯ ರೂಪಗಳು ತೈಲದಂತೆ ಸಾಥ್ ನೀಡುತ್ತಿವೆ. ಅಂತಹ ತೈಲಗಳಲ್ಲಿ ‘ಗಜಲ್’ ಗೆ ವಿಶಿಷ್ಟವಾದ ಸ್ಥಾನವಿದೆ. ಆಧ್ಯಾತ್ಮಿಕ ನೆಲೆಯಲ್ಲಿ ಜಗುಲಿ ಮೇಲೆ ರಂಗೋಲಿ ಹಾಕುತಿದೆ, ಜೊತೆ ಜೊತೆಗೆ ರಸೋಯಿ ಕೋಣೆಯಲ್ಲಿ ಅನ್ನಪೂರ್ಣೆಯಾಗಿಯೂ ಕಾರ್ಯ ನಿರ್ವಹಿಸುತಿದೆ. ಈ ನೆಲೆಯಲ್ಲಿ ಇಡೀ ಮನುಕುಲಕ್ಕೆ ದಾರಿ ದೀಪವಾಗಿದೆ. ಕನ್ನಡದಲ್ಲಿ ಇಂದು ಅಸಂಖ್ಯಾತ ಗಜಲ್ ಗೋ ಇದ್ದಾರೆ. ಅವರುಗಳಲ್ಲಿ ಉತ್ತಮ ಗಜಲ್ ಗೋ ಹಾಗೂ ಸುಶ್ರಾವ್ಯ ಕಂಠಾಧಿಪತಿಯಾದ ವಿಜಯಪುರದ ಶ್ರೀ ಪ್ರಕಾಶ್ ಸಿಂಗ್ ರಜಪೂತ್ ಅವರು ಪ್ರಮುಖರು. ಶಿಶುಪಾಲಸಿಂಗ್ ರಘುನಾಥಸಿಂಗ್ ರಜಪೂತ್ ಹಾಗೂ ಶ್ರೀಮತಿ ಶಶಿಕಲಾಬಾಯಿ ದಂಪತಿಗಳ ಮುದ್ದಿನ ಮಗುವಾಗಿ ಶ್ರೀ ಪ್ರಕಾಶ್ ಸಿಂಗ್ ರಜಪೂತ್ ಅವರು 1954ರ ಅಕ್ಟೋಬರ್ 24 ರಂದು ಜನಿಸಿದ್ದಾರೆ. ಡಿಪ್ಲೋಮಾ ಇನ್ ಇಲೆಕ್ಟ್ರೀಕಲ್ ಇಂಜಿನಿಯರಿಂಗ್ ಶಿಕ್ಷಣ ಪೂರೈಸಿ ತಮ್ಮನ್ನು ತಾವು ಓರ್ವ ವ್ಯಾಪಾರಿಯಾಗಿ ತೊಡಗಿಸಿಕೊಂಡಿರುವ ಶ್ರೀಯುತರು ಪ್ರವೃತ್ತಿಯಿಂದ ಬಹುಭಾಷಾ ಕವಿಗಳು ಹಾಗೂ ಗಾಯಕರು ಆಗಿ ಸಾಂಸ್ಕೃತಿಕ ಲೋಕದಲ್ಲಿ ಚಿರಪರಿಚಿತರಾಗಿದ್ದಾರೆ. ಕನ್ನಡ, ಹಿಂದಿ, ಇಂಗ್ಲೀಷ್, ಮರಾಠಿ, ಗುಜರಾತಿ ಹಾಗೂ ಉರ್ದು ಭಾಷೆಗಳನ್ನು ಬಲ್ಲವರಾಗಿದ್ದು, ಈ ಭಾಷೆಗಳಲ್ಲಿ ಸಾಹಿತ್ಯ ಕೃಷಿಯನ್ನು ಮಾಡಿದ್ದಾರೆ, ಮಾಡುತ್ತಿದ್ದಾರೆ. ವಿಶೇಷವಾಗಿ ಭಾಷಾಂತರ ಕಾರ್ಯದಲ್ಲಿ ನಿರತರಾಗಿರುವ ರಜಪೂತ್ ರವರು ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು.. ಮುಂತಾದ ಶರಣರ ವಚನಗಳನ್ನು ಹಿಂದಿ ಭಾಷೆಗೆ ಅನುವಾದಿಸಿದ್ದಾರೆ. ಹೆಸರಾಂತ ಹಿಂದಿ, ಉರ್ದು ಕವಿಗಳ 80 ಗಜಲ್ ಗಳನ್ನು ಕನ್ನಡಕ್ಕೆ ಪರಿಚಯಿಸಿದ್ದಾರೆ. ಹರಿವಂಶರಾಯ ಬಚ್ಚನ್ ಅವರ ‘ಮಧುಶಾಲಾ’ ಕೃತಿಯನ್ನು ಕನ್ನಡ ಮತ್ತು ಮರಾಠಿ ಭಾಷೆಗೆ ಅನುವಾದಿಸಿದ್ದಾರೆ. ಕಬೀರ್ ದಾಸ್, ರಹೀಮ್, ತುಳಸಿದಾಸರ ದೋಹೆಗಳನ್ನು ಕನ್ನಡಕ್ಕೆ ತಂದಿದ್ದಾರೆ. ಇದರೊಂದಿಗೆ ಹಲವಾರು ಹಿಂದಿ ಕವಿಗಳ ಕಾವ್ಯವನ್ನು ಕನ್ನಡ ಅಂಗಳದಲ್ಲಿ ಬಿತ್ತನೆ ಮಾಡಿದ್ದಾರೆ. ಇನ್ನೂ 2014ರಲ್ಲಿ “ಬಾಳಿನ ರಾಗ” ಎಂಬ 54 ಗಜಲ್ ಗಳ ಸಂಕಲನವನ್ನು ಪ್ರಕಟಿಸಿದ್ದಾರೆ. ಶಾರದೆಯ ಆರಾಧಕರಾದ ಶ್ರೀಯುತರು ಹಲವಾರು ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರೀಯರಾಗಿದ್ದು, ವಿವಿಧ ಸಾಹಿತ್ಯ ಸಮ್ಮೇಳನಗಳು, ಕವಿಗೋಷ್ಠಿ, ಗಜಲ್ ಮುಶಾಯಿರಾ ದಂತಹ ಮಧುರ ಕ್ಷಣಗಳಲ್ಲಿ ತಮ್ಮ ನೆನಪುಗಳನ್ನು ಶಾಶ್ವತಗೊಳಿಸಿಕೊಂಡಿದ್ದಾರೆ. ಆಕಾಶವಾಣಿ, ದೂರದರ್ಶನ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿ ನಾಡಿನ ಜನರಿಗೆ ರಂಜಿಸಿದ್ದಾರೆ. ಹತ್ತು ಹಲವಾರು ಸಂಘ ಸಂಸ್ಥೆಗಳು ಪ್ರಕಾಶ್ ಸಿಂಗ್ ರಜಪೂತ್ ರವರ ಪಾರದರ್ಶಕ ವ್ಯಕ್ತಿತ್ವವನ್ನು ಪ್ರೀತಿಸುತ್ತ ಸನ್ಮಾನಿಸಿವೆ, ಗೌರವಿಸಿವೆ!! ವೃತ್ತಿ ಹೊಟ್ಟೆಯನ್ನು ತುಂಬಿಸಿದರೆ ಪ್ರವೃತ್ತಿ ಹೃದಯದ ಹಸಿವನ್ನು ನೀಗಿಸುತ್ತದೆ. ಅಂತೆಯೇ ವ್ಯಕ್ತಿ ಹವ್ಯಾಸದಲ್ಲಿ ತನ್ನ ದಣಿವನ್ನು ಮರೆಯುತ್ತಾನೆ. ಈ ನೆಲೆಯಲ್ಲಿ ಗಜಲ್ ಗೋ ಪ್ರಕಾಶ್ ಸಿಂಗ್ ರಜಪೂತ್ ರವರ ಗಜಲ್ ಭಾವ ದೀಪ್ತಿಯ ಚಲನೆ ನಿರಂತರವಾಗಿ ಸಾಗುತ್ತಿದೆ. ಹಿಂದಿ, ಉರ್ದು ಗಜಲ್ ತೋಟಗಳಲ್ಲಿ ಸುಳಿದಾಡಿ ಆಕರ್ಷಿತರಾದ ಇವರು ತಮ್ಮ ಗಜಲ್ ಗಳಲ್ಲಿ ಭಾವಯಾನಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುತ್ತ, ಸಂಗೀತಕ್ಕೆ ಅಳವಡಿಸುತ್ತ ಬಂದಿದ್ದಾರೆ. ಕೇವಲ ತಮ್ಮ ಗಜಲ್ ಗಳನ್ನು ಮಾತ್ರ ಹಾಡದೇ, ಇನ್ನಿತರರ ಗಜಲ್ ಗಳನ್ನು ಹಾಡಿ ಸಂಭ್ರಮಿಸುವುದು ಅವರ ಸಕಾರಾತ್ಮಕ ವ್ಯಕ್ತಿತ್ವದ ಕೈಗನ್ನಡಿಯಾಗಿದೆ! ಗಜಲ್ ಎಂದರೆ ಅಂತರಂಗ ಅನಾವರಣಗೊಳಿಸುವ ಧ್ಯಾನಸ್ಥ ಸ್ಥಿತಿ. ಇದು ಆಡಂಬರದ ಡಂಗುರ ಸಾರುವ ದುಡಿಯಲ್ಲ, ಇದೊಂದು ಮನಸ್ಸಿಗೆ ಮುದ ನೀಡುವ ಢಮರುಗ. ಮಧ್ಯರಾತ್ರಿಯಲ್ಲೂ ಮನದ ಸ್ಮೃತಿಯಲ್ಲಿ ನೇಸರನನ್ನು ಮೂಡಿಸುವ ಗಜಲ್ ಹೃದಯದ ಬಡಿತವಾಗಿದ್ದು, ಕಲಾರಸಿಕರನ್ನು ತನ್ನ ತೆಕ್ಕೆಯಲ್ಲಿ ಹಿಡಿದುಕೊಂಡು ವಿಶ್ವಪರ್ಯಟನ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದೊಂದು ಭಾವಪೂರ್ಣ ಕಾವ್ಯ ಪ್ರಕಾರ!! “ಅವಳ ನಗೆ ಮುತ್ತು ನಾನು ಸಂಗ್ರಹಿಸಬೇಕು ಪಾಲಿನಲ್ಲಿ ಬಂದ ಪಾತ್ರ ನಾ ವಹಿಸಬೇಕು” ಎನ್ನುವ ಮತ್ಲಾ ಬಯಕೆಗಳ ಜೊತೆ ಜೊತೆಗೆ ಕರ್ಮ ಸಿದ್ಧಾಂತವನ್ನು ಅರುಹುತ್ತಿದೆ. ನಗೆ ಮುತ್ತು ಸಂಗ್ರಹಿಸುವ ಕಾರ್ಯಕ್ಕೆ ತೊಡಗಿರುವ ಮನವು ‘ಪಾಲಿಗೆ ಬಂದದ್ದು ಪಂಚಾಮೃತ’ ಎನ್ನುವ ಸ್ಥಿತಪ್ರಜ್ಞೆಗೆ ಅಂಟಿಕೊಂಡಿರುವುದು ಮನದಟ್ಟಾಗುತ್ತದೆ. ಪ್ರೀತಿಯ ದಾರಿಯಲ್ಲಿ ಎರಡು ಕವಲುಗಳು ಇರುವುದನ್ನು ಈ ಷೇರ್ ಸೂಚ್ಯವಾಗಿ ದಾಖಲಿಸುತ್ತದೆ. ‘ಮುತ್ತು ಸಂಗ್ರಹಿಸಿದರೆ’ ಶೃಂಗಾರ, ‘ಪಾಲಿನಲ್ಲಿ ಬಂದ ಪಾತ್ರ’ ಎಂಬುದು ವಿಪ್ರಲಂಭ ಶೃಂಗಾರವನ್ನು ಪ್ರತಿಧ್ವನಿಸುತ್ತಿದೆ. “ಯಾರು ತಂದೆ, ಯಾರು ತಾಯಿ, ಬಾಳಲು ಬೇಕು ರೂಪಾಯಿ ಹೊಟ್ಟೆ ತುಂಬಾ ಜೀವ ಬೇಡಿದೆ, ನುಂಗಲು ರಾಗಿಯ ಮುದ್ದಿ“ ಎನ್ನುವ ಈ ಷೇರ್ ಜೀವನದ ಆಯಾಮಗಳ ಜೊತೆಗೆ ಬಾಳಿನ ಅಂತಿಮ ದರ್ಶನವನ್ನು ಮಾಡಿಸುತ್ತದೆ. ಇಲ್ಲಿಯ ಮಿಸರೈನ್ ಸಂವಾದ ರೂಪದಲ್ಲಿ ಮೂಡಿ ಬಂದಿವೆ. ಈ ಜಗದೊಳಗೆ ಎಲ್ಲ ಸಂಬಂಧಗಳ ರಿಂಗ್ ಮಾಸ್ಟರ್ ದುಡ್ಡು ಎನ್ನುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಹಸಿದ ಒಡಲಿಗೆ ಬೇಕಾಗಿರುವುದು ತುತ್ತು ಅನ್ನ ಮಾತ್ರ!! ಈ ಕಾರಣಕ್ಕಾಗಿಯೇ ದುಡ್ಡನ್ನು ಉಪ್ಪಿಗೆ ಹೋಲಿಸಲಾಗಿದೆ. ಮನುಷ್ಯನ ಬದುಕೆನ್ನುವುದು ಕೊಳಲಿನ ನಾದದಂತೆ, ನುಡಿಸಲು ಬಂದರೆ ಅದುವೇ ಗೆಲುವು, ಇಲ್ಲದಿದ್ದರೆ….! ಈ ಮಾತು ನಮ್ಮ ಗಜಲ್ ಅಮೃತವರ್ಷಿಣಿಗೂ ಅನ್ವಯವಾಗುತ್ತದೆ. ಗಜಲ್ ರಚನೆಯೆಂದರೆ ಗಾಢವಾದ ಮೌನದೊಳಗಿನ ಕಲರವ, ತಪಸ್ಸಿನೊಳಗಿನ ಪ್ರವಚನ ; ನಿದ್ದೆಯಲ್ಲಿನ ಸೂಪ್ತಾವಸ್ಥೆಯಂತೆ. ಗಜಲ್ ಗೋ ಪ್ರಕಾಶ್ ಸಿಂಗ್ ರಜಪೂತ್ ರವರ ಗಜಲ್ ಗಾನಯಾನ ದಣಿವರಿಯದ ಪಾರಿವಾಳದಂತೆ ಆಗಸದಲ್ಲಿ ರೆಕ್ಕೆ ಬಿಚ್ಚಿ ಹಾರಾಡಲಿ ಎಂದು ಹೃನ್ಮನದಿ ಶುಭ ಕೋರುತ್ತೇನೆ. “ಎಲ್ಲ ಕೆಲಸ ಹೂವೆತ್ತಿದಂತೆ ಹಗುರವಾಗೋದು ಕಷ್ಟ ಮನುಷ್ಯರಾಗಿ ಹುಟ್ಟಿದವರಿಗೂ ಮನುಷ್ಯರಾಗೋದು ಕಷ್ಟ!” –ಮಿರ್ಜಾ ಗಾ0ಲಿಬ್ ಮುಂದಿನ ವಾರ.. ಅಂದರೆ ಗುರುವಾರ, ಮತ್ತೊಮ್ಮೆ ನಿಮ್ಮ ನೆಚ್ಚಿನ ಗಜಲ್ ಉಸ್ತಾದರೊಂದಿಗೆ ನಿಮ್ಮ ಮುಂದೆ ಪ್ರತ್ಯಕ್ಷನಾಗುವೆ. ಅಲ್ಲಿಯವರೆಗೂ ಧನ್ಯವಾದಗಳು… ಡಾ. ಮಲ್ಲಿನಾಥ ಎಸ್. ತಳವಾರ ರಾವೂರ ಎಂಬುದು ಪುಟ್ಟ ಊರು. ಚಿತ್ತಾವಲಿ ಶಾ ಎಂಬ ಸೂಫಿಯ ದರ್ಗಾ ಒಳಗೊಂಡ ಚಿತ್ತಾಪುರ ಎಂಬ ತಾಲೂಕಿನ ತೆಕ್ಕೆಯೊಳಗಿದೆ. ಕಲಬುರಗಿಯಲ್ಲಿ ಶತಮಾನ ಕಂಡ ನೂತನ ಪದವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಡಾ.ಮಲ್ಲಿನಾಥ ತಳವಾರ ಅವರು ಪುಟ್ಟ ರಾವೂರಿನಿಂದ ರಾಜಧಾನಿವರೆಗೆ ಗುರುತಿಸಿಕೊಂಡಿದ್ದು “ಗಾಲಿಬ್” ನಿಂದ. ಕವಿತೆ, ಕಥೆ, ವಿಮರ್ಶೆ, ಸಂಶೋಧನೆ, ಗಜಲ್ ಸೇರಿ ಒಂದು ಡಜನ್ ಗೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ ಜ್ಞಾನಪೀಠಿ ಡಾ.ಶಿವರಾಮ ಕಾರಂತರ ಸ್ತ್ರೀ ಪ್ರಪಂಚ ಕುರಿತು ಮಹಾಪ್ರಬಂಧ, ‘ಮುತ್ತಿನ ಸಂಕೋಲೆ’ ಎಂಬ ಸ್ತ್ರೀ ಸಂವೇದನೆಯ ಕಥೆಗಳು, ‘ಪ್ರೀತಿಯಿಲ್ಲದೆ ಬದುಕಿದವರ್ಯಾರು’ ಎಂಬ ಕವನ ಸಂಕಲನ, ‘ಗಾಲಿಬ್ ಸ್ಮೃತಿ’, ‘ಮಲ್ಲಿಗೆ ಸಿಂಚನ’ ದಂತಹ ಗಜಲ್ ಸಂಕಲನಗಳು ಪ್ರಮುಖವಾಗಿವೆ.’ರತ್ನರಾಯಮಲ್ಲ’ ಎಂಬ ಹೆಸರಿನಿಂದ ಚಿರಪರಿಚಿತರಾಗಿ ಬರೆಯುತ್ತಿದ್ದಾರೆ.’ರತ್ನ’ಮ್ಮ ತಾಯಿ ಹೆಸರಾದರೆ, ತಂದೆಯ ಹೆಸರು ಶಿವ’ರಾಯ’ ಮತ್ತು ಮಲ್ಲಿನಾಥ ‘ ಮಲ್ಲ’ ಆಗಿಸಿಕೊಂಡಿದ್ದಾರೆ. ‘ಮಲ್ಲಿ’ ಇವರ ತಖಲ್ಲುಸನಾಮ.ಅವಮಾನದಿಂದ, ದುಃಖದಿಂದ ಪ್ರೀತಿಯಿಂದ ಕಣ್ತುಂಬಿಕೊಂಡೇ ಬದುಕನ್ನು ಕಟ್ಟಿಕೊಂಡ ಡಾ.ತಳವಾರ ಅವರಲ್ಲಿ, ಕನಸುಗಳ ಹೊರತು ಮತ್ತೇನೂ ಇಲ್ಲ. ಎಂದಿಗೂ ಮಧುಶಾಲೆ ಕಂಡಿಲ್ಲ.ಆದರೆ ಗಜಲ್ ಗಳಲ್ಲಿ ಮಧುಶಾಲೆ ಅರಸುತ್ತ ಹೊರಟಿದ್ದಾರೆ..ಎಲ್ಲಿ ನಿಲ್ಲುತ್ತಾರೋ
ಅಂಕಣ ಸಂಗಾತಿ ನೆನಪಿನದೋಣಿಯಲಿ ವರ್ತನೆಯವರು ಪ್ರಲಾಪಿಸಬೇಡ ನೆನೆದು ಹಪಹಪಿಸಿ ಕಳೆದುಹೋದದ್ದನ್ನ ಕಾಲ ಏಕಾಏಕಿ ಬಂದು ಮೇದದ್ದನ್ನ ನೆನೆ ಇದನು ಮರೆಯದೆ ಲುಕ್ಸಾನಿಗೆದೆ ಮರುಗದೆ ಕಳೆದುಕೊಂಡದ್ದು ನಿನ್ನೊಡನೆ ಇದ್ದಷ್ಟು ದಿನ ಹಿಗ್ಗ ನೀಡಿದ್ದನ್ನ ಕೆ ಎಸ್ ನಿಸಾರ್ ಅಹ್ಮದ್ ಅಂದು ವಾಯುವಿಹಾರ ಮುಗಿಸಿ ಬಂದ ರವೀಶ್ “ನೋಡು ದಿನಾ ಹಾಲಿನ ಪ್ಯಾಕೆಟ್ ತೊಗೋತಿದ್ನಲ್ಲ ಪಾಪ ಆ ವ್ಯಕ್ತಿ ಕರೋನಾ ಬಂದು ಹೋಗಿ ಬಿಟ್ನಂತೆ ಪಾಪ” ಎಂದು ಪೇಚಾಡಿಕೊಂಡರು. ಯಾಕೋ ನನಗೆ ಥಟ್ಟಂತ ನನ್ನ ಬಾಲ್ಯ ನೆನಪಾಯಿತು. ಅಂದು ನನ್ನ ಹುಟ್ಟಿದ ಹಬ್ಬ. ಅಂದೇ ಬೆಳಿಗ್ಗೆ ನಮ್ಮ ಮನೆಗೆ ಮೊಸರು ವರ್ತನೆಗೆ ಹಾಕುತ್ತಿದ್ದವಳ ಮರಣದ ಸುದ್ದಿಯೂ ಬಂತು.ಅಮ್ಮ ಹುಟ್ಟುಹಬ್ಬವನ್ನೇ ಮರುದಿನಕ್ಕೆ ಪೋಸ್ಟ್ ಪೋನ್ ಮಾಡಿ ಅವಳ ಮರಣದ ಶೋಕಾಚರಣೆ ಆಚರಿಸಿದರು. ನನ್ನ ಮುಖ ಕೊಂಚ ಗಡಿಗೆ ಗಾತ್ರ ಆಗಿದ್ದು ಸುಳ್ಳಲ್ಲ. ವರ್ತನೆಯೆಂದರೆ ನಿಘಂಟಿನಲ್ಲಿ ನಡವಳಿಕೆ ರೂಢಿ ಎಂದು ಅರ್ಥ . ಆದರೆ ಜನಸಾಮಾನ್ಯರ ಭಾಷೆಯಲ್ಲಿ ದಿನವೂ ಅಥವಾ ನಿಯಮಿತವಾಗಿ ವಸ್ತುಗಳನ್ನು ಸರಬರಾಜು ಮಾಡಿ ತಿಂಗಳಿಗೊಮ್ಮೆ ಹಣ ಪಡೆಯುವವರಿಗೆ ವರ್ತನೆಯವರು ಎಂದು ಕರೆಯುವ ಅಭ್ಯಾಸ. ಪ್ರತಿಯೊಂದಕ್ಕೂ ಅಂಗಡಿಯನ್ನು ಅವಲಂಬಿಸದ ಕಾಲ ಅದು. ಮನೆಯ ಬಾಗಿಲಿಗೆ ಹಾಲು ಮೊಸರು ಹೂವು ತರಕಾರಿ ಎಲ್ಲವನ್ನೂ ಒದಗಿಸುತ್ತಿದ್ದರು. ಒಮ್ಮೊಮ್ಮೆ ಈಗಿನ ಆನ್ ಲೈನ್ ಸೇವೆಗಳನ್ನು ನೋಡಿದಾಗ ಅದೇ ನೆನಪಾಗುತ್ತದೆ .ಆದರೆ ಆಗಿನ ಆತ್ಮೀಯತೆ ಪರಿಚಯದ ಭಾವ ಇಂದಿನ ತಲುಪಿಸುವ ವ್ಯವಸ್ಥೆಗಳಿಗೆಲ್ಲಿ ಬರಬೇಕು? ಹಾಲಿನ ಗಡಿಗೆಗಳನ್ನು ಬಿದಿರಿನ ಬುಟ್ಟಿಯಲ್ಲಿ ಇಟ್ಟುಕೊಂಡು ಬರುತ್ತಿದ್ದ ಹಾಲಿನ ಮಹದೇವಮ್ಮ ನನ್ನ ನೆನಪಿನಿಂದ ಏಕೋ ಇನ್ನೂ ಮರೆಯಾಗಿಯೇ ಇಲ್ಲ .ಹಸಿರು ಅಥವಾ ಕೆಂಪು ಚೌಕಳಿಯ ಹತ್ತಿ ಸೀರೆ ಎಲ್ಲದಕ್ಕೂ ಬಿಳಿ ರವಿಕೆಯನ್ನೇ ತೊಟ್ಟು ಹಣೆತುಂಬ ಕಾಸಗಲ ಕುಂಕುಮ ಇಟ್ಟ ನಲ್ವತ್ತೈದು ಐವತ್ತರ ಆಸುಪಾಸಿನ ಮಹಿಳೆ. ಸಾಸಿವೆ ಎಳ್ಳು ಬೆರೆಸಿದಂಥ ಬಣ್ಣದ ನೆರೆತಲೆ. ಕಾಡು ಹೂವಾದರೂ ಸರಿ ಹೂ ಮುಡಿಯದೆ ಇರುತ್ತಿರಲಿಲ್ಲ. ಕೈತುಂಬಾ ಜರುಗಲು ಸಾಧ್ಯವಿರದಷ್ಟು ಗುತ್ತನಾಗಿ ಹಸಿರುಬಳೆ ತೊಡುತ್ತಿದ್ದಳು .ತಪ್ಪದೆ ರೇಡಿಯೋದ 7 ಮೂವತ್ತೈದರ ಕನ್ನಡ ವಾರ್ತೆಯ ಸಮಯಕ್ಕೆ ಹಾಲು ತರುತ್ತಿದ್ದ ಅವಳ ಸಮಯಪಾಲನೆ ನಿಜಕ್ಕೂ ಆಶ್ಚರ್ಯ . ಆಗ ಲೀಟರ್ ಕಾಲ ಅಲ್ಲ ಪಾವು ಸೊಲಿಗೆ ಗಳಲ್ಲಿ ಅಳತೆ. ಹೆಚ್ಚು ಹಾಲು ತೆಗೆದುಕೊಂಡ ದಿನ ಒಂಟಿಕೊಪ್ಪಲ್ ಕ್ಯಾಲೆಂಡರ್ನಲ್ಲಿ + ಚಿಹ್ನೆ ಹಾಕಿ ಎಷ್ಟು ಹೆಚ್ಚು ಎಂದು ಬರೆಯುವ ಕೆಲಸ ಹಾಗೆಯೇ ತೆಗೆದುಕೊಳ್ಳದ ,ಕಡಿಮೆ ತೆಗೆದುಕೊಂಡಾಗ _ ಚಿಹ್ನೆ ಹಾಕಿ ಗುರುತು ಮಾಡುತ್ತಿದ್ದುದು . ತಿಂಗಳ ಕೊನೆಯಲ್ಲಿ ಅವಳು ಹೇಳಿದ ಲೆಕ್ಕ ನಮ್ಮದಕ್ಕೆ ತಾಳೆಯಾಗುತ್ತಿತ್ತು ಅಷ್ಟೊಂದು ಮನೆಗಳ ಲೆಕ್ಕಾಚಾರ ಬಾಯಿಯಲ್ಲೇ ನೆನಪಿಡುವ ಅವಳ ಬುದ್ದಿವಂತಿಕೆ ನಿಜಕ್ಕೂ ಶ್ಲಾಘನೀಯವೇ. ಮಕ್ಕಳ ಮದುವೆ ಮಾಡಿದಾಗಲೆಲ್ಲ ನವವಧುವರರನ್ನು ಕರೆದುಕೊಂಡು ಬಂದು ಆಶೀರ್ವಾದ ಕೊಡಿಸುತ್ತಿದ್ದಳು . ವಾರದಲ್ಲಿ ಒಂದೋ ಎರಡೋ ದಿನ ಹನ್ನೊಂದು ಗಂಟೆಗೆ ವಾಪಸ್ಸು ಹೋಗುವಾಗ ಅಮ್ಮ ಕೊಟ್ಟ ತಿಂಡಿ/ಊಟವನ್ನು ಮಾಡಿ ಹೋಗುತ್ತಿದ್ದಳು. ಬೆಳಿಗ್ಗೆ ಬಂದಾಗ ಒಮ್ಮೊಮ್ಮೆ ಕೇಳಿ ಕಾಫಿ ಕುಡಿಯುತ್ತಿದ್ದಳು. ನಾನು ದೊಡ್ಡವಳಾದಾಗ ಕೊಬ್ಬರಿ ತುಪ್ಪ ಆರೈಕೆಗೆಂದು ಅಕ್ಕರೆಯಿಂದ ತಂದುಕೊಟ್ಟದ್ದು ಇನ್ನೂ ಹಸಿರು . ನನ್ನ ಕಡೆಯ ತಂಗಿಗೆ 1ಪುಟ್ಟ ಗಿಂಡಿಯ ತುಂಬಾ ಹಾಲು ಕೊಡುತ್ತಿದ್ದಳು; ಅದಕ್ಕೆ ಲೆಕ್ಕವಿಡುತ್ತಿರಲಿಲ್ಲ. ಮೊಸರಿನ ಗಂಗಮ್ಮ ಇವಳಿಗಿಂತ ಭಿನ್ನ ಸ್ವಲ್ಪ ನಾಜೂಕಿನ ನಾರಿ ..ಆಗಿನ ಕಾಲದ ಲೆಕ್ಕದಲ್ಲಿ ಸ್ಟೈಲ್ ವಾಲಿ . ಮೂವತ್ತರ ಒಳಗಿನ ವಯಸ್ಸು .ಮಧ್ಯಾಹ್ನ ಹನ್ನೊಂದು ಗಂಟೆ ಸಮಯಕ್ಕೆ ಬರುತ್ತಿದ್ದಳು .ನಾವು ಶಾಲೆಗೆ ಹೋಗದ ದಿನಗಳಲ್ಲಿ ಮಾತ್ರ ಅವಳ ದರ್ಶನ ಭಾಗ್ಯ . ಮೊಸರು ಮಜ್ಜಿಗೆಯ ಗಡಿಗೆಗಳನ್ನು ಬಿದಿರಿನ ಬುಟ್ಟಿಯಲ್ಲಿ ಒಪ್ಪವಾಗಿ ಇಟ್ಟು ಕೊಂಡು ಬಂದು ಅಚ್ಚುಕಟ್ಟಾಗಿ ಅಳೆದುಕೊಡುತ್ತಿದ್ದಳು. ಇವಳಿಗೋ ಲೆಕ್ಕದ ಗಂಧವೇ ಇಲ್ಲ .ಅದನ್ನು ಮುಚ್ಚಿಟ್ಟುಕೊಳ್ಳಲು “ನೀವು ಕೊಟ್ಟಷ್ಟು ಕೊಡಿ ಮೋಸ ಮಾಡೋರಲ್ಲ ಬಿಡಿ” ಅಂದುಬಿಡುತ್ತಿದ್ದಳು. ಪಾಪ 9 ತಿಂಗಳು ತುಂಬುವವರೆಗೂ ಗರ್ಭಿಣಿ ಹೆಂಗಸು ಬಂದು ಮೊಸರು ವ್ಯಾಪಾರ ಮಾಡ್ತಿದ್ದಳು. ಹೆರಿಗೆಯಲ್ಲಿ ಕಷ್ಟವಾಗಿ ಸತ್ತುಹೋದಳು. ಈ ಪ್ರಸಂಗವನ್ನೇ ನಾನು ಮೇಲೆ ಹೇಳಿದ್ದು. ಮನೆಯ ತೋಟದಲ್ಲಿ ರಾಶಿ ಹೂ ಬಿಟ್ಟಿದ್ದರಿಂದ ಹೂವಿಗೆ ವರ್ತನೆಯವರಿರಲಿಲ್ಲ . ಆದರೆ ಒಬ್ಬ ಹಣ್ಣು ಮುದುಕಿ ಹತ್ತಿರದ ಹಳ್ಳಿಯಿಂದ ಸಂಪಿಗೆ ಕೆಂಡ ಸಂಪಿಗೆ ಹೂ ತರುತ್ತಿದ್ದರು. ಬಂದಾಗಲೆಲ್ಲ ಅಮ್ಮ ಬೋಣಿ ಮಾಡಬೇಕು ಕಾಫಿ ತಿಂಡಿ ತೀರ್ಥ ಕೊಡಬೇಕು ಅವರಿಗೆ .ಪೈಸೆಗೆ 1ಸಂಪಿಗೆ ಹೂವು ಹತ್ತು ಇಪ್ಪತ್ತು ಸಂಪಿಗೆ ಹೂಗಳನ್ನು ಪೋಣಿಸಿ ದಿಂಡೆ ಮಾಡಿ ಮುಡಿದು ಕೊಳ್ಳುತ್ತಿದ್ದೆವು. ಆಕೆಯ ಹೆಸರೇನೋ ಮರೆತು ಹೋಗಿದೆ . ಆದರೆ ಏಕವಚನದಲ್ಲಿ ಮಾತನಾಡಿಸಿ ಆನಂತರ ನಮ್ಮ ತಂದೆಯಿಂದ ಬೈಗುಳ ಮತ್ತು ಹಾಗೆ ಮಾಡಬಾರದೆಂಬ ಧೀರ್ಘ ಲೆಕ್ಚರ್ ಕೇಳಿದ್ದು ಮರೆತಿಲ್ಲ. ಭಿಕ್ಷುಕರನ್ನೂ ಬಹುವಚನದಿಂದ ಮಾತನಾಡಿಸುವ ನನ್ನ ಅಭ್ಯಾಸಕ್ಕೆ ಇದು ನಾಂದಿಯಾಗಿತ್ತು. ಹಾಗೆಯೇ ದೂರದ ಎಲೆತೋಟದ ಬಳಿಯಿಂದ ತಂದು ವಿಳ್ಳೆಯದೆಲೆ ಕವಳಿಗೆ ಲೆಕ್ಕದಲ್ಲಿ ಕೊಡುತ್ತಿದ್ದ ಎಲೆಯ ನಂಜಮ್ಮ ಸಹ ಒಬ್ಬರು ವರ್ತನೆಯವರು . ಅವರ ಕಿವಿಯ ತೂತು ತುಂಬಾ ದೊಡ್ಡದಾಗಿದ್ದು ಈಗ ನಾವು ಗೌರಿ ಬಾಗಿನಕ್ಕೆ ಇಡುವ ಬಳೆಬಿಚ್ಚೋಲೆಯನ್ನೇ ಕಿವಿಗೆ ಧರಿಸಿಕೊಳ್ಳುತ್ತಿದ್ದುದು ನಮ್ಮ ಬೆರಗಿಗೆ ಆಗ ಕಾರಣವಾಗಿತ್ತು. ಆಕೆಯೂ ಬಂದಾಗಲೆಲ್ಲಾ ಕಾಫಿ ಕೇಳಿ ಕುಡಿಯುತ್ತಿದ್ದರು. ಒಮ್ಮೊಮ್ಮೆ ಮಾತ್ರ ಊಟ ಮಾಡುತ್ತಿದ್ದರು. ಇನ್ನೊಬ್ಬ ವ್ಯಕ್ತಿ ಸೈಕಲ್ ನಲ್ಲಿ ಬೇರೆ ಬೇರೆ ಡಬ್ಬಗಳನ್ನು ಕಟ್ಟಿಕೊಂಡು ಬಂದು ಎಣ್ಣೆ ಮಾರುತ್ತಿದ್ದುದು ನೆನಪು . ಕಡಲೆಕಾಯಿ ಎಣ್ಣೆ, ಎಳ್ಳೆಣ್ಣೆ, ಕೊಬ್ಬರಿಎಣ್ಣೆ, ಹರಳೆಣ್ಣೆ ಇದೆಲ್ಲಾ ಆತನ ಬಳಿಯೇ ತೆಗೆದುಕೊಳ್ಳುತ್ತಿದ್ದುದು. ಪ್ರತೀ ಶನಿವಾರ ಬರುತ್ತಿದ್ದರು ಅನ್ನಿಸತ್ತೆ . ಆತನ ತಿಳಿನೀಲಿ ಷರಟು ಹಾಗೂ ತಲೆಗೆ ಕಟ್ಟಿಕೊಳ್ಳುತ್ತಿದ್ದ ಟವಲ್ ಇನ್ನೂ ಕಣ್ಣಿಗೆ ಕಟ್ಟಿದ ಹಾಗೆ ಇದೆ . ಇನ್ನೊಬ್ಬಾತನೂ ಹಾಗೆ ಸೈಕಲ್ಲಿನಲ್ಲಿ ಬರುತ್ತಿದ್ದರು. ಆಯಾ ಕಾಲದಲ್ಲಿ ಸಿಗುವ ಹಣ್ಣುಗಳನ್ನು ತಂದು ಮಾರುತ್ತಿದ್ದರು . ಆಗೆಲ್ಲಾ ಕೆಜಿಯ ಲೆಕ್ಕವೇ ಇಲ್ಲ ಇಡೀ ಹಲಸು, ಗೂಡೆಗಟ್ಟಲೆ ಮಾವು ಕಿತ್ತಳೆ, ಗೊನೆಬಾಳೆ ಹೀಗೆಯೇ. ತೆಂಗಿನಕಾಯಿಯಂತೂ ಪ್ರತಿ ಬಾರಿಯೂ ತರುತ್ತಿದ್ದರು . ಸೊಪ್ಪು ತರಕಾರಿಯ ತಾಯಮ್ಮ, ಪೌರಕಾರ್ಮಿಕ ನಾಗಿ, ತೋಟದ ಕೆಲಸ ಮಾಡಲು ಬರುತ್ತಿದ್ದ ರಂಗಯ್ಯ ಎಲ್ಲರೂ ನೆನಪಿನಲ್ಲಿದ್ದಾರೆ .ಮನೆಗೆ ಬರುವ ಅತಿಥಿಗಳಿಗೆ ಕೊಡುವಂತೆ ಕಾಫಿ ತಿಂಡಿ ಊಟ ಕೊಟ್ಟು ಆದರಿಸುತ್ತಿದ್ದ ಅಮ್ಮ ಅವರಿಗೆಲ್ಲಾ ಅನ್ನಪೂರ್ಣೆಯೇ. ಹಬ್ಬಗಳ ವಿಶೇಷ ಭಕ್ಷ್ಯಗಳು, ಗೋಕುಲಾಷ್ಟಮಿ ತಿಂಡಿ, ಸಂಕ್ರಾಂತಿಯ ಎಳ್ಳು ಎಲ್ಲದರಲ್ಲೂ ಅವರಿಗೆ ಪಾಲು ಇದ್ದೇ ಇರುತ್ತಿತ್ತು. ಅದರ ಜೊತೆಗೆ ಮಕ್ಕಳನ್ನು ಚೆನ್ನಾಗಿ ಓದಿಸಿರಿ ಎಂಬ ಬೋಧನೆಯೂ ಕೂಡ. ಹಳೆಯ ಬಟ್ಟೆಗಳು, ಉಪಯೋಗಿಸಿದ ವಸ್ತುಗಳು ಇವನ್ನೆಲ್ಲಾ ನೆನಪಿನಲ್ಲಿಟ್ಟುಕೊಂಡು ಇವರಿಗೆ ಇವರಿಗೆ ಎಂದು ವಿತರಿಸುತ್ತಿದ್ದುದು, ಅವರ ಮನೆಯ ಸಮಾರಂಭಗಳಿಗೆ ಉಡುಗೊರೆ ಹಣ ಕೊಡುತ್ತಿದ್ದುದು ಆಗ ಏನೂ ಅನಿಸದಿದ್ದರೂ ಈಗ ಅಮ್ಮ ಅಪ್ಪನ ವಿಶಾಲ ಮನೋಭಾವದ ಅರಿವಾಗಿಸುತ್ತಿದೆ. ತೀರ ಬಡತನದ ಹಾಲು ಕೊಳ್ಳಲು ಶಕ್ತಿಯಿರದ ಕುಟುಂಬವೊಂದಿತ್ತು. ಆ ಮನೆಯ ಮಗುವಿಗೆ ಅಂತ 1 ಲೋಟ ಹಾಲು ಕೊಟ್ಟು ಹೋಗ್ತಿದ್ದರು ವರ್ತನೆಯವರು ಆಗೆಲ್ಲಾ. ಈಗ ಆ ರೀತಿಯ ಜನರನ್ನು ಕಾಣಲು ಸಾಧ್ಯವೇ? ಈಗಿನ ಹಾಗೆ ಸದಾ ಕೈಯಲ್ಲಿ ಹಣ ಓಡಾಡದ ಅಂದಿನ ದಿನಗಳಲ್ಲಿ ಸಂಬಳ ಬಂದ ಕೂಡಲೇ ಇವರಿಗೆಲ್ಲ ಹಣಪಾವತಿ .ಒಮ್ಮೆ ಹೆಚ್ಚು ಲೆಕ್ಕವಾದಾಗ ಸ್ವಲ್ಪ ಉಳಿಸಿಕೊಂಡು ಮುಂದಿನ ತಿಂಗಳಿಗೂ ಕ್ಯಾರಿ ಫಾರ್ವರ್ಡ್ ಮಾಡುತ್ತಿದ್ದುದು. ಸಾವು ಮದುವೆ ಊರಿನ ಓಡಾಟ ಅಂತ ಹೆಚ್ಚುವರಿ ಖರ್ಚುಗಳು ಇದ್ದಾಗಲೂ ಅಷ್ಟೇ. ಎಲ್ಲ ಸಮಯಕ್ಕೂ ಫ್ಲೆಕ್ಸಿಬಲ್. ಹಾಗೆಯೇ ಅವರಿಗೆ ಹೆಚ್ಚಿನ ಅಗತ್ಯವಿದ್ದಾಗ ನಮ್ಮಿಂದ ಮುಂಗಡವಾಗಿ ಹಣ ತೆಗೆದುಕೊಂಡು ತಿಂಗಳು ತಿಂಗಳು ಉತ್ತಾರ ಹಾಕ್ಕೊಳ್ತಾ ಹೋಗುವುದು. ಆ ಲೆಕ್ಕಾಚಾರಗಳನ್ನು ಕೇಳಿದರೆ ಒಂಥರಾ ಖುಷಿಯ ಅನುಭವ .ಎಲ್ಲಾ ಬಾಯಿಮಾತಿನ ಗಣಿತ ವಿಶ್ವಾಸದ ಲೆಕ್ಕಾಚಾರ . ಬರೀ ವ್ಯಾವಹಾರಿಕವಾಗಿಯಲ್ಲದೆ ಪರಸ್ಪರ ಪ್ರೀತಿ ವಿಶ್ವಾಸ ನಂಬಿಕೆಗಳಿಂದ ಕೂಡಿದ ಸಂಬಂಧಗಳು ಅವು. ಒಬ್ಬರಿನ್ನೊಬ್ಬರ ಹರ್ಷಕ್ಕೆ ಸಂತಸಪಟ್ಟು ಸಂಕಟದಲ್ಲಿ ಸಹಾನುಭೂತಿ ತೋರುತ್ತಿದ್ದ ಅಂದಿನ ಕಾಲ ಸಮರಸದ ಪಾಠವನ್ನು ಸೋದಾಹರಣ ಕಲಿಸುತ್ತಿತ್ತು. ನಿಜ! ಜಾತಿಯ ಕಟ್ಟುಪಾಡುಗಳು ಆಗ ಸಮಾಜದಲ್ಲಿ ಇನ್ನೂ ಬಿಗಿಯಾಗಿತ್ತು. ಅದನ್ನು ಮೀರದೆಲೆಯೇ ಸೌಹಾರ್ದದ ನಂಟಿತ್ತು ಮಿಡಿಯುವ ತುಡಿತವಿತ್ತು. ಜಾತಿಯ ಬೇಲಿಯನ್ನೂ ಮೀರಿ ಅಂತಃಕರಣದ ಸರಿತೆ ಹರಿಯುತ್ತಿತ್ತು . ಬರುಬರುತ್ತಾ ಅಂಗಡಿಗಳು ಮಾಲ್ ಗಳು ಹೆಚ್ಚಿದಂತೆಲ್ಲಾ ವರ್ತನೆಯವರು ಕಡಿಮೆಯಾಗಿದ್ದಾರೆ . ಇದ್ದರೂ ಮೊದಲಿನಂತೆ ವ್ಯವಧಾನದಿಂದ ಕೂತು ಮಾತನಾಡುವಷ್ಟು ಕಷ್ಟಸುಖ ವಿಚಾರಿಸುವಷ್ಟು ಸಮಯ ತಾಳ್ಮೆ ಯಾರಿಗಿದೆ? ಕಾಲನ ನಾಗಾಲೋಟದಲ್ಲಿ ನಾವೂ ರೇಸಿಗೆ ಬಿಟ್ಟ ಕುದುರೆಗಳಂತೆ ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ಓಡುತ್ತಲೇ ಇದ್ದೇವೆ . ವರ್ತನೆಯವರು ಇರಲಿ ಮನೆಯವರ ಜತೆ ತಾನೆ ಸಮಾಧಾನದಿಂದ ಕುಳಿತು ಮಾತನಾಡುವ ಹರಟೆ ಹೊಡೆಯುವ ಕಷ್ಟಸುಖ ಹಂಚಿಕೊಳ್ಳುವ ಪುರುಸೊತ್ತಾದರೂ ನಮಗಿದೆಯೇ? ವಿಲಾಪಿಸಬೇಡ ಕಳೆದುಕೊಂಡದ್ದಕ್ಕೆ ನೀನೇ ಕಳೆದು ಹೋಗುವ ಮುನ್ನ ಮೃತ್ಯು ಹೊತ್ತೊಯ್ದು ಮತ್ತೊಬ್ಬನಿಗೆ ಅರ್ಪಿಸುವ ಮುನ್ನ ನಿನ್ನ ಜೀವದನರ್ಘ್ಯ ಅಪರಂಜಿಯನ್ನ ನಿಸಾರ್ ಅಹ್ಮದ್ ನಿಜ! “ಪುರಾಣಮಿತ್ಯೇವ ನ ಸಾಧುಸರ್ವಂ” ಎಂಬಂತೆ ನೆನಪಿನ ಭಿತ್ತಿಯ ಹರಳುಗಳನ್ನು ನೋಡಿ ನೆನೆದು ಖುಷಿ ಪಡಬೇಕು. ಇಲ್ಲದುದಕ್ಕೆ ಪರಿತಪಿಸಬಾರದು. ಕಾಲಪ್ರವಾಹದಲ್ಲಿ ಸಾಗಿಹೋಗುವ ಹುಲ್ಲು ಕಡ್ಡಿಯಂತೆ ಬದಲಾವಣೆಗಳಿಗೆ ತೆರೆದುಕೊಳ್ಳುತ್ತಾ ಹಳೆಯ ನೆನಪಿನ ಮೆಲುಕಿನ ಬೇರುಗಳಲ್ಲಿ ಹೊಸ ಅನುಭವದ ಚಿಗುರು ಪಲ್ಲವಿಸುತ್ತಿರಬೇಕು. ಇದುವೇ ಜೀವನ ಇದು ಜೀವ ತಾನೇ? “ಕಾಲಾಯ ತಸ್ಮೈ ನಮಃ “. ಸುಜಾತಾ ರವೀಶ್ ಭಾರತೀಯ ಜೀವ ವಿಮಾ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವ ಎನ್ ಸುಜಾತ ಅವರ ಕಾವ್ಯನಾಮ ಸುಜಾತಾ ರವೀಶ್ . 1 ಕವನ ಸಂಕಲನ “ಅಂತರಂಗದ ಆಲಾಪ” ಪ್ರಕಟವಾಗಿದೆ. “ಮುಖವಾಡಗಳು” ಕವನ ಕುವೆಂಪು ವಿಶ್ವವಿದ್ಯಾನಿಲಯದ ಎರಡನೇ ಬಿ ಎಸ್ ಸಿ ಯ ಪಠ್ಯದಲ್ಲಿ ಸ್ಥಾನ ಪಡೆದುಕೊಂಡಿವೆ. ಕವನದ ವಿವಿಧ ಪ್ರಕಾರಗಳು, ಕಥೆ ,ಲಲಿತ ಪ್ರಬಂಧ, ಪುಸ್ತಕ ವಿಮರ್ಶೆ ಹೀಗೆ ವಿವಿಧ ಪ್ರಕಾರಗಳಲ್ಲಿ ಕೃಷಿ ಸಾಧಿಸುತ್ತಿರುವ ಇವರ ರಚನೆಗಳು ವಿವಿಧ ಬ್ಲಾಗ್ ಗಳು, ಬ್ಲಾಗ್ ಪತ್ರಿಕೆ, ನಿಯತಕಾಲಿಕೆ ಹಾಗೂ ವೃತ್ತ ಪತ್ರಿಕೆ ಹಾಗೂ ಪರಿಷತ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ವೃತ್ತಿ ಹಾಗೂ ಪ್ರವೃತ್ತಿಯ ಮಧ್ಯೆ ಸಮತೋಲನ ಸಾಧಿಸಿಕೊಂಡು ಬರವಣಿಗೆಯಲ್ಲಿ ತೊಡಗುವ ಬಯಕೆ ಲೇಖಕಿಯವರದು.
ಪುಷ್ಪಲತಾದಾಸ್ ಅವರು ಒಬ್ಬ ಭಾರತೀಯ ಸ್ವಾತಂತ್ರ್ಯ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ, ಗಾಂಧಿವಾದಿ ಮತ್ತು ಅಸ್ಸಾಂನ ಶಾಸಕಿಯೂ ಕೂಡ ಆಗಿದ್ದರು
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—52 ಯಕ್ಷಗಾನದ ಸಿಹಿ-ಕಹಿ ನೆನಪುಗಳು ಹವ್ಯಾಸಿ ಕಲಾವಿದನಾಗಿ ನಾನು ಯಕ್ಷಗಾನ ರಂಗದಲ್ಲಿ ತೊಡಗಿಕೊಂಡ ಬಳಿಕ ಕಾಲೇಜಿನ ಆಚೆಗೂ ನನ್ನ ಜೀವನಾನುಭವಗಳು ವಿಸ್ತಾರಗೊಂಡವು. ಪ್ರೇಕ್ಷಕರ ಅಭಿಮಾನ ಒಲವುಗಳು ಒಂದು ಕಡೆ ರೋಮಾಂಚನಗೊಳಿಸಿದರೆ ಸಂಘಟಕರ ಅಪೇಕ್ಷೆಯಂತೆ ನಡೆದುಕೊಳ್ಳಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ನಿಷ್ಠುರವನ್ನು, ವಿರೋಧವನ್ನು ಎದುರಿಸಬೇಕಾದ ಅನಿವಾರ್ಯ ಸನ್ನಿವೇಶಗಳೂ ಸೃಷ್ಟಿಯಾಗುತ್ತಿದ್ದವು. ಬೇರೆ ಬೇರೆ ಕೌಟುಂಬಿಕ ಪರಿಸರದಿಂದ ಬಂದ ಕಲಾವಿದರ ಆಲೋಚನೆ, ಸ್ವಭಾವಗಳಿಗೆ ಹೊಂದಿಕೊಳ್ಳುವುದು ಹಲವು ಬಾರಿ ಕಷ್ಟವೇ ಎನಿಸಿದರೂ ಯಕ್ಷಗಾನದ ಮೇಲಿನ ಪ್ರೀತಿಯಿಂದ ಎಲ್ಲವನ್ನೂ ಸಹ್ಯವಾಗಿಸಿಕೊಳ್ಳುವ ಅವಶ್ಯಕತೆಯಿರುತ್ತಿತ್ತು. ಜೊತೆಗೆ ನಾನೊಬ್ಬ ಕಾಲೇಜು ಉಪನ್ಯಾಸಕನಾದ್ದರಿಂದ ವೃತ್ತಿ ಗೌರವವನ್ನು ಕಾಪಾಡಿಕೊಳ್ಳಲೇಬೇಕಾದ ಗುರುತರವಾದ ಜವಬ್ದಾರಿಯೂ ನನ್ನ ಮೇಲಿತ್ತು. ಬೇರೆ ಬೇರೆ ಊರುಗಳಲ್ಲಿ ಬೇರೆ ಬೇರೆ ಸಂಘಟಕರು ಸಂಘಟಿಸುವ ಕಾರ್ಯಕ್ರಮದಲ್ಲಿ ನಮಗೆ ಎಲ್ಲೆಡೆಯೂ ನಿರೀಕ್ಷಿತ ಮಟ್ಟದ ವ್ಯವಸ್ಥೆ ಇರುವ ಭರವಸೆಯೇನೂ ಇರುತ್ತಿರಲಿಲ್ಲ. ಎಲ್ಲೋ ಕುಳಿತು ಬಣ್ಣ ಬಳಿದುಕೊಳ್ಳುವ, ಎಂಥಹದೋ ನೆಲದಲ್ಲಿ ನಿದ್ದೆಗಾಗಿ ಒರಗಿಕೊಳ್ಳುವ, ಮೆಚ್ಚದ ಅಡಿಗೆಯನ್ನೂ ಹೇಗೋ ಉಂಡು ಹೊಟ್ಟೆತುಂಬಿಕೊಳ್ಳುವ ಸಂದರ್ಭಗಳು ಬಂದಾಗ ನನ್ನ ಉಪನ್ಯಾಸಕನೆಂಬ ಅಹಮಿಕೆಯನ್ನು ಬದಿಗಿಟ್ಟು ಹೊಂದಾಣಿಕೆ ಮಾಡಿಕೊಳ್ಳುವ ಅನಿವಾರ್ಯತೆಗಳು ನನ್ನನ್ನು ಪರಿಪೂರ್ಣ ಮತ್ತು ಸಹನಶೀಲ ಮನುಷ್ಯನನ್ನಾಗಿ ರೂಪಿಸಲು ನೆರವಾದವು ಎಂದೇ ನನಗೆ ಅನಿಸುತ್ತದೆ. ಮತ್ತು ಅದೇ ಕಾರಣದಿಂದ ಎಲ್ಲರೊಡನೊಂದಾಗುವ ಸಂಯಮದ ಜೀವನ ಪಾಠ ನೀಡಿ ಯಕ್ಷಗಾನವೇ ನನ್ನನ್ನು ತಿದ್ದಿ ಪರಿಷ್ಕರಿಸಿದೆ ಎಂದು ನಂಬಿದ್ದೇನೆ. ಕಲೆಯೊಂದರ ಪ್ರಭಾವ ಮತ್ತು ಫಲಿತಾಂಶ ಅಂತಿಮವಾಗಿ ಇದೆ ಅಲ್ಲವೇ? ಯಕ್ಷರಂಗಕ್ಕೆ ಸಂಬಂಧಿಸಿದಂತೆ ಎರಡು ಮರೆಯಲಾಗದ ಸಿಹಿ-ಕಹಿ ಘಟನೆಗಳನ್ನು ನಿಮ್ಮೊಡನೆ ಹಂಚಿಕೊಳ್ಳಬೇಕು…….. ೧೯೮೮-೯೦ ರ ಸಮಯ. ಅಂಕೋಲೆಯ ನಮ್ಮ ಹವ್ಯಾಸಿ ಯಕ್ಷಗಾನ ತಂಡವು ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ನಲ್ಲಿ ಒಂದು ಯಕ್ಷಗಾನ ಪ್ರದರ್ಶನ ನೀಡಬೇಕಿತ್ತು. ಅಂದು ತುಂಬ ಹೆಸರು ಮಾಡಿದ, ಹಲವಾರು ವೃತ್ತಿಮೇಳಗಳಲ್ಲೂ ಅತಿಥಿ ಕಲಾವಿದರಾಗಿ ಪಾತ್ರ ನಿರ್ವಹಿಸಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯಲ್ಲಿ ಪರಿಚಿತರಾದ ಅಗ್ಗರಗೋಣದ ಎಂ.ಎಂ. ನಾಯಕರು ನಮ್ಮ ತಂಡದ ನಾಯಕತ್ವ ಮತ್ತು ಪ್ರದರ್ಶನದ ಜವಾಬ್ದಾರಿ ವಹಿಸಿದ್ದರು. ಎಂ.ಎಂ.ನಾಯಕರು ವೃತ್ತಿಯಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ಶಾಲಾ ಶಿಕ್ಷಣ ತಪಾಸಣಾಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. ಆದರೂ ಯಕ್ಷಗಾನವನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಅವರು ಹವ್ಯಾಸಿ ಕಲಾವಿದರಾಗಿ ಮೇಲಿಂದ ಮೇಲೆ ಯಕ್ಷಗಾನ ಪ್ರದರ್ಶನ, ಸಂಘಟನೆ ಪಾತ್ರ ನಿರ್ವಹಣೆಯಲ್ಲಿ ಆಸಕ್ತಿಯಿಂದ ತೊಡಗಿಕೊಳ್ಳುತ್ತಿದ್ದರು. ಅವರ ದುಷ್ಟ ಬುದ್ಧಿ, ಕಂಸ, ಜರಾಸಂಧ ಮುಂತಾದ ಪಾತ್ರಗಳು ಬಹಳಷ್ಟು ಜನಮನ್ನಣೆ ಗಳಿಸಿದ್ದವು. ಅಂದು ನಾವು ಹುಬ್ಬಳ್ಳಿಯಲ್ಲಿ ಪ್ರದರ್ಶನ ನೀಡಬೇಕಾದ ಪ್ರಸಂಗ “ಚಂದ್ರಹಾಸ ಚರಿತ್ರೆ”. ಅದರಲ್ಲಿ ಎಂ.ಎಂ. ನಾಯಕರ ದುಷ್ಟಬುದ್ಧಿ, ವಂದಿಗೆ ವಿಠೋಬ ನಾಯಕರ ಕುಳಿಂದ, ಗೋಕರ್ಣದ ಅನಂತ ಹಾವಗೋಡಿಯವರ ಮದನ, ನನ್ನದು ಚಂದ್ರಹಾಸ. ಮತ್ತಿತರ ಪಾತ್ರಗಳನ್ನು ತಂಡದ ವಿವಿಧ ಕಲಾವಿದರು ನಿರ್ವಹಿಸಬೇಕಿತ್ತು. ಸಂಜೆಯ ಆರು ಗಂಟೆಗೆ ನಮ್ಮ ಪ್ರದರ್ಶನ ಆರಂಭವಾಗಬೇಕಿದ್ದುದರಿಂದ ನಾವು ಮಧ್ಯಾಹ್ನ ಹನ್ನೊಂದು ಗಂಟೆಗೆ ಅಂಕೋಲೆಯಿಂದ ಪ್ರಯಾಣ ಆರಂಭಿಸಿದೆವು. ಒಂದು ಬಾಡಿಗೆ ಟೆಂಪೋ ಗೊತ್ತು ಮಾಡಿಕೊಂಡು ನಮ್ಮ ಯಕ್ಷಗಾನ ಪರಿಕರಗಳು ಇತ್ಯಾದಿ ಹೇರಿಕೊಂಡು ಹಿಮ್ಮೇಳ, ಮುಮ್ಮೇಳದ ಕಲಾವಿದರೆಲ್ಲ ಸೇರಿ ಟೆಂಪೋ ಭರ್ತಿಯಾಗಿತ್ತು. ಒಂದು ಒಂದುವರೆ ತಾಸಿನ ಪ್ರಯಾಣ ಮಾಡಿ ನಾವು ಅರಬೈಲ್ ಘಟ್ಟ ಹತ್ತಿಳಿದು ಯಲ್ಲಾಪುರ ನಗರ ಪ್ರವೇಶಕ್ಕೆ ಸನಿಹವಾಗಿದ್ದೆವು. ಸ್ವಲ್ಪ ದೂರದಿಂದಲೇ ನಮಗೆ ದ್ವಿಚಕ್ರವಾಹನಗಳೂ ಸೇರಿದಂತೆ ಸಾಲುಗಟ್ಟಿ ನಿಂತ ಬೇರೆ ಬೇರೆ ವಾಹನಗಳು ಗೋಚರಿಸಿದವು. ವಿಚಾರಿಸಿದಾಗ, “ಪೊಲೀಸರಿಂದ ವಾಹನ ತಪಾಸಣೆ ನಡೆಯುತ್ತಿದೆ” ಎಂಬ ವರ್ತಮಾನ ತಿಳಿಯಿತು. ನಮಗೆ ಸಮಯದ ಕಾಳಜಿ ತುಂಬ ಇದೆ. ನಾವು ಮುಂದಿನ ಎರಡು ಗಂಟೆಗಳ ಪ್ರಯಾಣ ಮಾಡಿ ಹುಬ್ಬಳ್ಳಿ ತಲುಪಬೇಕು. ಆ ಬಳಿಕ ವೇಷ ಇತ್ಯಾದಿ ಸಿದ್ಧಗೊಂಡು ಆರು ಗಂಟೆಗೆ ಪ್ರದರ್ಶನ ಆರಂಭವಾಗಬೇಕು! ತಂಡದ ನಾಯಕರಾದ ಎಂ.ಎಂ.ನಾಯಕ ಮತ್ತಿತರ ಕಲಾವಿದರು ವಾಹನದಿಂದ ಇಳಿದು ಮುಂದೆ ಹೋಗಿ ಪೊಲೀಸು ಅಧಿಕಾರಿಗಳನ್ನು ಕಂಡು ನಮ್ಮ ಪರಿಸ್ಥಿತಿಯನ್ನು ನಿವೇದಿಸಿಕೊಂಡರು. ಆದರೂ ಸರತಿಯ ಸಾಲಿನಲ್ಲೇ ಬರುವಂತೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಆದೇಶಿಸಿ ಅವರನ್ನು ಹಿಂದೆ ಕಳುಹಿಸಿದರು. ಅವರ ಪರಿಶೀಲನೆಯ ನಿಧಾನ ಗತಿಯಿಂದ ತಂಡದ ಎಲ್ಲ ಕಲಾವಿದರಿಗೂ ಚಡಪಡಿಕೆ ಆರಂಭವಾಗಿತ್ತು. ತಾಸು ಕಳೆದ ಬಳಿಕ ನಮ್ಮ ವಾಹನದ ಬಳಿ ಬಂದ ಕಾನ್ಸ್ಟೇಬಲ್ ಓರ್ವ ನಮ್ಮ ವಾಹನವನ್ನು ಹತ್ತಿಳಿದು, ವಾಹನಕ್ಕೆ ಒಂದು ಸುತ್ತು ಬಂದು ಪರಿಶೀಲಿಸಿದಂತೆ ಮಾಡಿ ಮರಳಿ ಹೊರಟವನು ನಮ್ಮ ವಾಹನ “ಓವರ್ ಲೋಡ್” ಆಗಿದೆಯೆಂದೇ ದೂರು ಸಲ್ಲಿಸಿದನಂತೆ. ದಂಡ ಇತ್ಯಾದಿ ವಸೂಲಿ ಪ್ರಕ್ರಿಯೆಗಳು ಮುಗಿಯದೇ ನಮ್ಮನ್ನು ಸುಲಭವಾಗಿ ಬಿಡಲು ಸಾಧ್ಯವೇ ಇಲ್ಲವೆಂದು ಪೊಲೀಸು ಅಧಿಕಾರಿ ಇನ್ನಷ್ಟು ಉಪೇಕ್ಷೆ ಮಾಡಿ ಬೇರೆ ವಾಹನ ಪರೀಕ್ಷೆಯಲ್ಲಿ ತಲ್ಲೀನರಾದರು. ಇನ್ನರ್ಧ ತಾಸು ವ್ಯರ್ಥ ಕಾಲ ಹರಣವಾಯಿತು. “ಇದು ಸುಲಭದಲ್ಲಿ ಬಗೆಹರಿಯುವ ಹಾಗೆ ಕಾಣುತ್ತಿಲ್ಲ” ಎಂದು ಕೊಳ್ಳುತ್ತ ಇದುವರೆಗೆ ವಾಹನದಿಂದ ಕೆಳಗಿಳಿಯದೇ ಕುಳಿತುಕೊಂಡಿದ್ದ ನಾನು ಮತ್ತು ಸಹ ಕಲಾವಿದರಿಬ್ಬರು ವಾಹನದಿಂದ ಇಳಿದು ರಸ್ತೆಗೆ ಬಂದೆವು. ದೂರದಲ್ಲಿ ಪೊಲೀಸು ಅಧಿಕಾರಿ ತನ್ನ ಮೋಟಾರ್ ಬೈಕನ್ನು ಅಡ್ಡವಿಟ್ಟು ಅದರ ಮೇಲೆ ಕುಳಿತುಕೊಂಡು ಕಾನ್ಸ್ಟೇಬಲ್ಗಳಿಗೆ ಸೂಚನೆ ನೀಡುತ್ತಿರುವುದು ಕಾಣಿಸುತ್ತಿತ್ತು. ನಮ್ಮ ತಂಡದ ಪರವಾಗಿ ಅಹವಾಲು ಸಲ್ಲಿಸುತ್ತಿದ್ದ ಹಿರಿಯರೂ ಅಲ್ಲಿಯೇ ನಿಂತಿದ್ದರು. “ನೋಡುವಾ ಏನು ನಡಿತೀದೆ ಅಲ್ಲಿ” ಎಂಬ ಕುತೂಹಲದಿಂದ ನಾವೂ ನಾಲ್ಕು ಹೆಜ್ಜೆ ಮುಂದೆ ನಡೆದು ಅವರನ್ನು ಸಮೀಪಿಸಿದೆವು. ಒಮ್ಮೆ ನಮ್ಮತ್ತ ನೋಡಿದ ಪೊಲೀಸು ಅಧಿಕಾರಿ ಕುತೂಹಲದಿಂದ ನಮ್ಮನ್ನು ಗಮನಿಸುತ್ತಲೇ ಚಂಗನೆ ತನ್ನ ಬೈಕ್ ಮೇಲಿಂದ ಕೆಳಗಿಳಿದು ನಿಂತವನು ನಮ್ಮತ್ತಲೇ ಧಾವಿಸಿ ಬರುತ್ತ ನೇರವಾಗಿ ನನ್ನ ಕೈಗಳನ್ನು ಹಿಡಿದುಕೊಂಡು “ಸರ್ ನೀವು?” ಎಂದು ಹಸನ್ಮುಖಿಯಾಗಿ ಉದ್ಘರಿಸಿದ! ನನ್ನನ್ನು ಸೇರಿ ನಮ್ಮ ಗುಂಪಿನ ಎಲ್ಲರಿಗೂ ಅತ್ಯಾಶ್ಚರ್ಯವಾಯಿತು. ಪೊಲೀಸು ಅಧಿಕಾರಿ ಯಾರೆಂದು ನನಗಿನ್ನೂ ಗುರುತೇ ಹತ್ತಿರಲಿಲ್ಲ! ಮೂಕ ವಿಸ್ಮಿತರಾಗಿದ್ದೆವಷ್ಟೇ. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ಆತನೇ ಮುಂದುವರಿದು “ಸರ್ ನಾನು ಸದಾನಂದ ನಾಯಕ…. ನಿಮ್ಮ ವಿದ್ಯಾರ್ಥಿ” ಎಂದು ಪರಿಚಯಿಸಿಕೊಂಡ ಕ್ಷಣದ ಸಂತೋಷವನ್ನು ಇಲ್ಲಿ ಶಬ್ಧಗಳಲ್ಲಿ ವರ್ಣಿಸಲು ಅಸಾಧ್ಯವೇ. ಮುಂದಿನದನ್ನು ನಾನು ವಿವರಿಸಬೇಕಿಲ್ಲ. ನಮ್ಮ ತಂಡಕ್ಕೆ ಗೌರವಪೂರ್ಣ ವಿದಾಯ ಯಲ್ಲಾಪುರ ಪೊಲೀಸ್ ಇಲಾಖೆಯಿಂದ ದೊರೆಯಿತು. ನಮ್ಮ ಯಕ್ಷ ತಂಡದ ಸದಸ್ಯರೆಲ್ಲ ನನ್ನನ್ನು ಹೃತ್ಪೂರ್ವಕ ಅಭಿನಂದಿಸಿದರು. ಸಕಾಲದಲ್ಲಿ ನಾವು ಹುಬ್ಬಳ್ಳಿ ತಲುಪಿ ಸಮಯಕ್ಕೆ ಸರಿಯಾಗಿಯೇ ಪ್ರದರ್ಶನ ನೀಡಿ ಊರಿಗೆ ಮರಳಿದ್ದೆವು. ನನಗೆ ಇಲ್ಲಿ ಬಹಳ ಮುಖ್ಯವಾಗಿ ಕಂಡದ್ದು ಸದಾನಂದ ನಾಯಕ ಎಂಬ ನನ್ನ ವಿದ್ಯಾರ್ಥಿಯ ಸೌಜನ್ಯಶೀಲತೆ. ನಾನು ಆತನಿಗೆ ಮಾಡಿದ ಪಾಠವೆಷ್ಟು? ಆತ ಬಿ.ಎಸ್.ಸಿ ಭಾಗ ಒಂದರ ಒಂದು ವರ್ಷ ಮಾತ್ರ. ಕನ್ನಡ ಓದಿದ ವಿದ್ಯಾರ್ಥಿ. ಅದರಲ್ಲೂ ವಾರದ ಮೂರು ತಾಸಿನ ಅವಧಿಯಲ್ಲಿ ನಾನು ಪಾಠ ಹೇಳಿದ್ದು ವಾರದ ಒಂದು ತಾಸು ಮಾತ್ರ. ಅಷ್ಟು ಅಲ್ಪಾವಧಿಯ ಪಾಠ ಕೇಳಿದ ಆತ ತನ್ನ ಹೃದಯದಲ್ಲಿ ಉಳಿಸಿಕೊಂಡಿದ್ದ ನನ್ನ ಕುರಿತಾದ ಗೌರವಾದರಗಳು ಬೆಲೆ ಕಟ್ಟಲಾಗದಷ್ಟು ಎಂಬುದು ನನಗೆ ಈ ಸನ್ನಿವೇಶದಲ್ಲಿ ಸ್ಪಷ್ಟವಾಯಿತು. ಶಿಕ್ಷಕ ವೃತ್ತಿಗೆ ಅಂತಿಮವಾಗಿ ಸಿಗುವ ಫಲವೆಂದರೆ ಎಲ್ಲೋ ಹೇಗೋ ಇರುವ ವಿದ್ಯಾರ್ಥಿಯೊಬ್ಬ ಅಭಿವ್ಯಕ್ತಿಸುವ ಗೌರವಾದರಗಳೇ ಅಲ್ಲವೇ? ಮುಂದಿನ ದಿನಗಳಲ್ಲಿ ಕಾರವಾರದ ಕೊಂಕಣ ಮರಾಠಾ ಸಮುದಾಯದ ಇದೇ ಸದಾನಂದ ನಾಯಕ ಎಂಬ ಪೊಲೀಸು ಅಧಿಕಾರಿ ಅಂಕೋಲೆಯ ಗೋವಿಂದರಾಯ ನಾಯಕ ಮಾಸ್ತರರ ಹಿರಿಯ ಮಗಳು (ಡಾ. ಶ್ರೀದೇವಿ ತಿನೇಕರ ಅವರ ಹಿರಿಯ ಸಹೋದರಿ) ವೀಣಾ ಎಂಬುವವರ ಕೈ ಹಿಡಿದು ಸಮೃದ್ಧ ದಾಂಪತ್ಯ ಜೀವನ ನಡೆಸಿದರು. ಇಲಾಖೆಯಲ್ಲಿ ಎಸ್.ಪಿ ಹುದ್ದೆಯವರೆಗೆ ಪದೋನ್ನತಿ ಪಡೆದು ಈಗ ನಿವೃತ್ತಿ ಹೊಂದಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇದೇ ಕಾಲಾವಧಿಯಲ್ಲಿ ನಡೆದ ಒಂದು ನೋವಿನ ಕಥೆಯನ್ನೂ ಇಲ್ಲಿ ಪ್ರಸ್ತಾಪಿಸಬೇಕು. ನನ್ನ ಪತ್ನಿ ನಿರ್ಮಲಾ ನನ್ನ ಎರಡನೆಯ ಮಗನಿಗೆ ಜನ್ಮ ನೀಡಿ (ಅಭಿಷೇಕ) ಬಾಣಂತಿಯ ಉಪಚಾರದ ಅವಧಿ ಮುಗಿಸಿಕೊಂಡು ತೌರಿಂದ ಅಂಕೋಲೆಗೆ ಮರಳಿದ್ದಳು. ಮಕ್ಕಳು ಬಾಣಂತಿ ಮನೆಗೆ ಬಂದರೆಂದು ಅಡಿಗೆ ಇತ್ಯಾದಿ ಸಹಾಯಕ್ಕಾಗಿ ನನ್ನ ತಾಯಿ ನಮ್ಮನೆಗೆ ಬಂದು ಉಳಿದುಕೊಂಡಿದ್ದಳು. ಅದು ಯುಗಾದಿ ಹಬ್ಬದ ಮುನ್ನಾ ದಿನ. ಅಂಕೋಲೆಯ ಸಮೀಪದ ಹಾರವಾಡ ಎಂಬ ಹಳ್ಳಿಯಲ್ಲೊಂದು ಆಟ. ಹಾರವಾಡ ಗ್ರಾಮದಲ್ಲಿ ನನ್ನನ್ನು ತುಂಬಾ ಗೌರವಿಸುವ ಸಮಾಜದ ಹಿರಿಯರಾದ ಕಾನೂನು ಇಲಾಖೆಯಲ್ಲಿ ಉದ್ಯೋಗದಲ್ಲಿರುವ ಥಾಕು ಹಾರವಾಡೇಕರ ಎಂಬುವರು. ಅವರ ಸಹೋದರ ಅಬಕಾರಿ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಜಿ.ಎಂ. ಹಾರವಾಡೇಕರ, ಮತ್ತವರ ಇಡಿಯ ಕುಟುಂಬ ನೆಲೆಸಿದೆ. ಅವರ ಒತ್ತಾಯದ ಮೇರೆಗೆ ಅಂದಿನ ಯಕ್ಷಗಾನ ಪ್ರಸಂಗದಲ್ಲಿ ನಾನೂ ಅತಿಥಿ ಕಲಾವಿದನಾಗಿ ಒಂದು ಪಾತ್ರವಹಿಸಲು ಒಪ್ಪಿಕೊಂಡೆ. ಅಂದು ಥಾಕು ಹಾರವಾಡೇಕರ, ಜಿ.ಎಂ.ಹಾರವಾಡೇಕರ ಸಹಿತ ಊರಿನ ಹಲವು ಸಮಾಜ ಬಂಧುಗಳೇ ಪಾತ್ರ ನಿರ್ವಹಿಸಿದ್ದರು. ನನ್ನದು ಒಂದು ರಕ್ಕಸ ಪಾತ್ರ. ಮಧ್ಯರಾತ್ರಿಯ ಬಳಿಕವೇ ರಂಗ ಪ್ರವೇಶಿಸುವ ನನ್ನ ಪಾತ್ರ ಬೆಳಕು ಹರಿಯುವವರೆಗೆ ಮುಂದುವರಿಯಬೇಕಿತ್ತು. (ಅಪರೂಪದ ಕಥಾನಕವಾದ್ದರಿಂದ ಪ್ರಸಂಗ ಮತ್ತು ಪಾತ್ರದ ಹೆಸರು ಮರೆತಿದೆ ಕ್ಷಮಿಸಿ) ಸಾಧಾರಣವೆನ್ನಿಸುವ ಮಟ್ಟಿಗಷ್ಟೇ ನನ್ನ ಪಾತ್ರ ನಿರ್ವಹಣೆ ನನಗೆ ಸಾಧ್ಯವಾಗಿತ್ತು. ಆಟ ಮುಗಿಸಿ ಹೊರಡುವುದಕ್ಕೆ ನನ್ನ ಸ್ವಂತ ವಾಹನವಿತ್ತು. ಈ ಮೊದಲಿನ ಎಜ್ಡಿ ಬೈಕ್ನ್ನು ಬದಲಾಯಿಸಿ ಕೆಲವೇ ತಿಂಗಳ ಹಿಂದೆ “ವೆಸ್ಪಾ ಎಲ್.ಎಂ.ಎಲ್” ಎಂಬ ಸ್ಕೂಟರ್ನ್ನು ಖರೀದಿಸಿದ್ದೆ. ನನ್ನ ಜೊತೆಯಲ್ಲಿಯೇ ಆಟಕ್ಕೆ ಬಂದ ನನ್ನ ಆಪ್ತ ಗೆಳೆಯ ವಸಂತ ಲಕ್ಷ್ಮೇಶ್ವರ ಮತ್ತು ನಾನು ಅಂಕೋಲೆಯತ್ತ ಹೊರಟೆವು. ಸ್ವಲ್ಪ ದೂರ ಕ್ರಮಿಸುತ್ತಿದ್ದಂತೆ ನಮ್ಮೂರಿನಿಂದ ಆಟ ನೋಡಲು ಬಂದಿದ್ದ ನಮ್ಮ ದಾಯಾದಿ ಚಿಕ್ಕಪ್ಪ ನಾರಾಯಣ ಊರಿಗೆ ಮರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ. ಅವನನ್ನು ಅಂಕೋಲೆಯವರೆಗೆ ಬಿಡುವ ಮನಸ್ಸಿನಿಂದ ಸ್ಕೂಟರ್ ಏರಿಸಿಕೊಂಡೆ. ಮುಂದುವರೆದು ಅವರ್ಸಾ ಎಂಬ ಊರು ದಾಟಿ ಅಂದು ರಸ್ತೆಯ ಅಂಚಿಗೆ ಇರುವ ಗೌರಿ ಕೆರೆಯ ತಿರುವಿನಲ್ಲಿ ಆಕಸ್ಮಿಕವಾಗಿ ಲಾರಿಯೊಂದು ಎದುರಿಗೆ ಬಂದಿತು. ತಪ್ಪಿಸಿಕೊಳ್ಳಲು ಟಾರ್ ರಸ್ತೆಯಿಂದ ನನ್ನ ಸ್ಕೂಟರ್ನ್ನು ಕೆಳಗಿಳಿಸಿದೆ. ಕಚ್ಚಾರಸ್ತೆಯಲ್ಲಿ ಸಮತೋಲನ ತಪ್ಪಿದಂತಾದಾಗ ವಾಹನದ ಮೇಲಿದ್ದ ಇಬ್ಬರೂ ಜಿಗಿದು ಬಿಟ್ಟರು. ಸ್ಕೂಟರ್ ನಿಯಂತ್ರಣ ತಪ್ಪಿ ಟಾರ್ ರಸ್ತೆಯ ಮೇಲೆ ಬಿತ್ತಲ್ಲದೆ ನನ್ನನ್ನು ಕೊಂಚ ದೂರದವರೆಗೆ ಎಳೆದುಕೊಂಡು ಹೋಗಿತ್ತು. ಅತ್ತಿತ್ತಲಿಂದ ಯಾರೋ ಬಂದು ನನ್ನನ್ನು ಹಿಡಿದೆತ್ತಿದರು. ಮಂಡಿಯ ಚಿಪ್ಪಿನಿಂದ ಕೊಂಚ ಕೆಳಗೆ ಚರ್ಮ ಹರಿದು ಹೋಗಿ ಒಂದು ಕಾಲಿನ ಎಲುಬು ಕಣ್ಣಿಗೆ ಕಾಣಿಸುತ್ತಿತ್ತು. ಅದೇ ಕಾಲಿನ ಪಾದದ ಮೇಲ್ಭಾಗದಲ್ಲಿಯೂ ಆಳವಾದ ಗಾಯವಾಗಿತ್ತು. ಟಾರು ರಸ್ತೆಗೆ ಬಿದ್ದ ಎಡಗೈ ಅರ್ಧಭಾಗದ ಚರ್ಮ ಸಂಪೂರ್ಣ ಸುಲಿದು ಕೆಂಪಾದ ಮಾಂಸಖಂಡಗಳು ಕಾಣಿಸುತ್ತಿದ್ದವು. ಮೈಮೇಲಿನ ಬಟ್ಟೆಗಳೆಲ್ಲ ಹರಿದು ಚಿಂದಿಯಾಗಿದ್ದವು.! ಹೊಸತೇ ಆಗಿದ್ದ ಸ್ಕೂಟರ್ನ ಮುಂಭಾಗ ನುಜ್ಜು ಗುಜ್ಜಾಗಿ ನಡೆಸಲೂ ಆಗದಂತೆ ವಿಕಾರಗೊಂಡಿತ್ತು. ಯಾರೋ ಪುಣ್ಯಾತ್ಮರು ತಮ್ಮ ವಾಹನದಲ್ಲಿ ಅಂಕೋಲೆಯ ಮಿಷನರಿ ಆಸ್ಪತ್ರೆಗೆ ನನ್ನನ್ನು ತಲುಪಿಸಿ ಉಪಕಾರ ಮಾಡಿದರು. ಡಾ. ಅಬ್ರಾಹ್ಮಂ ಬಂದು ಪರೀಕ್ಷೆ ಮಾಡಿದ ಬಳಿಕ ಕೈ ಕಾಲುಗಳ ಎಲುಬು ಮುರಿದಿಲ್ಲವಾದರೂ ಆಗಿರುವ ಆಳವಾದ ಗಾಯಗಳ ಉಪಚಾರಕ್ಕೆ ದವಾಖಾನೆಗೆ ದಾಖಲಾಗುವಂತೆ ಸಲಹೆ ನೀಡಿದರು. ಆಗಲೂ ನಾನು ನಡೆದಾಡ ಬಲ್ಲೆನಾದ್ದರಿಂದ ಆಸ್ಪತ್ರೆಗೆ ದಾಖಲಾಗಲು ಒಪ್ಪದೆ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರ ಒಪ್ಪಿಗೆ ಪಡೆದೆ. ಗಾಯಕ್ಕೆ
ಸಾಧಕಿಯರ ಯಶೋಗಾಥೆ
‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ
“ಹೂವು ಮಾತ್ರವಲ್ಲ ಈಗ ಬಂಡೆಯೂ ಗಜಲ್ ಆಗುವುದು
ಸಮಯದ ಧ್ವನಿ ಇದಾಗಿದೆ ಖಡ್ಗವೂ ಗಜಲ್ ಆಗುವುದು”
-ಕಮಲ್ ಕಿಶೋರ ‘ಭಾವುಕ’
ಅಂಕಣ ಸಂಗಾತಿ ನೆನಪಿನದೋಣಿಯಲಿ ಜಟಕಾ ವಿಧಿಯೆಂಬ ಚಾಲಕನು ಓಡಿಸುತಿಹ ಬಂಡಿಯಲಿ ಕುಳಿತು ನಡೆದಿದೆ ಬಾಳಪಯಣ. ಅಲ್ಲಿಷ್ಟು ಇಲ್ಲಿಷ್ಟು ಒಂದಷ್ಟು ನೆನಪುಗಳ ಬುತ್ತಿ ಔತಣ . ** ಕಾಲನ ನಾಗಾಲೋಟದ ಪಯಣವು ಗಾಡಿಗೆ ಕಟ್ಟಿದ ಕುದುರೆಗಳು ನಾವು ವಿಧಿಯ ಕಡಿವಾಣದ ಬಿಗಿ ಅಂಕೆ ನಡೆದಿಹೆವು ಆಮಿಷಕೆ , ಚಾಟಿಯಾ ಭಯಕೆ “ಹಾಯ್ ಹಾಯ್ ಬಾಜೂ ಬಾಜೂ” ಟಕ್ ಟಕ್ ಅನ್ನುವ ಕುದುರೆಗಳ ಖರಪುಟದ ಶಬ್ದದೊಂದಿಗೆ ಈ ಪದಗಳು ಕಿವಿಗೆ ಬಿತ್ತೆಂದರೆ ರಸ್ತೆಯಲ್ಲಿ ಆಡುತ್ತಿದ್ದ ಮಕ್ಕಳೆಲ್ಲ ಬದಿಗೆ ಸರಿದು ಗೌರವ ಸಲ್ಲಿಸುವಂತೆ ನಿಲ್ಲುತ್ತಿದ್ದೆವು. ಬೀದಿಯ ಕೊನೆಯಲ್ಲಿ ತಿರುಗುವವರೆಗೂ ಅದನ್ನೇ ನೋಡುತ್ತಾ ಅಥವಾ ನಿಂತರೆ ಯಾರ ಮನೆಗೆ ಎಂದು ಮಾತನಾಡುತ್ತಾ. ಆ ಪಕ್ಕಕ್ಕೆ ನಿಲ್ಲುವ ಕ್ರಿಯೆಯೋ! ಎಲ್ಲರೂ ಹೇಳಿ ಹೇಳಿ ಅಚ್ಚೊತ್ತಿಬಿಟ್ಟಿತ್ತು. ಓಡುವ ಕುದುರೆಯಡಿ ಮಕ್ಕಳು ಸಿಕ್ಕಿ ಗಾಯಗೊಳ್ಳುತ್ತಿದ್ದ ಪ್ರಕರಣಗಳು ಆಗ ಅಪರೂಪವೇನಲ್ಲ. ಇದೆಲ್ಲಾ ಅರುವತ್ತರ ದಶಕದ ಮೊದಲಿನ ವರ್ಷಗಳ ಮೈಸೂರಿನ ದೃಶ್ಯ. ತೀರ ಇತ್ತೀಚೆಗೆ 8 ವರ್ಷದ ತಂಗಿಯ ಮಗ ಸುಧನ್ವನಿಗೆ ಕುದುರೆಗಾಡಿ ಅನುಭವ ಕೊಡಿಸಲೆಂದು ಜಟಕಾ ಸವಾರಿಗೆ ಕರೆದೊಯ್ದಿದ್ದೆವು. ಟಾಂಗಾ ಸವಾರಿಯ ಹಳೆಯ ನೆನಪುಗಳೆಲ್ಲ ರೀಲಿನಂತೆ ಬಿಚ್ಚಿಕೊಂಡವು. ಅರಮನೆಯ ಎದುರಿಗಿನ ಟಾಂಗಾ ನಿಲ್ದಾಣದಿಂದ ಸಯ್ಯಾಜಿರಾವ್ ರಸ್ತೆ ಮತ್ತು ಸುತ್ತಲ ಪಾರಂಪರಿಕ ಕಟ್ಟಡಗಳನೆಲ್ಲಾ ನೋಡಿ ಬರುವಾಗ ಹಳೆಯ ಸಂಗತಿಗಳು ಸ್ಮರಣೆಯ ಕೋಶದಲ್ಲಿ ಅಡಗಿದ್ದವು. ಗೂಡು ಚದುರಿಸಿದಾಗ ಚೆಲ್ಲಾಪಿಲ್ಲಿಯಾಗುವ ಇರುವೆಗಳ ತರಹ ಸರಿದಾಡತೊಡಗಿದ್ದವು . ಅವುಗಳನ್ನು ಹಾಗೆಯೇ ಇಲ್ಲಿ ಹಿಡಿದಿಡುವ ಪ್ರಯತ್ನ . ನನಗೆ ನೆನಪಿರುವಷ್ಟು ಹಿಂದಕ್ಕೆ ಅಂದರೆ 5 ಅಥವಾ 6 ವರ್ಷದವಳಿದ್ದಾಗ ಮೈಸೂರಿನಲ್ಲಿ ಆಂತರಿಕ ಸಾರಿಗೆಯೆಂದರೆ ಜಟಕಾನೇ ಆಗಿತ್ತು. ಸಿಟಿ ಬಸ್ಸುಗಳು ಇರದಿದ್ದ ಕಾಲ. ಪುಟ್ಟಮಕ್ಕಳು ನಡೆಯಲು ಹಾಗೂ ಸ್ವಲ್ಪ ದೂರದ ಪಯಣ ಇದ್ದಾಗಲೆಲ್ಲಾ ಆಶ್ರಯಿಸುತ್ತಿದ್ದುದು ಜಟಕಾವನ್ನೇ. ಮೈಸೂರಿನ ಮಹಾರಾಜರು ೧೮೯೭ ರಲ್ಲಿ ಟಾಂಗಾವನ್ನು ಮೈಸೂರಿಗೆ ತಂದರಂತೆ. ಸುಮಾರು ಐನೂರು ಆರುನೂರು ಜಟಕಾ ಗಳಿದ್ದ ಕಾಲವೂ ಇತ್ತು ಎಂದು ಹೇಳುತ್ತಾರೆ. ಈಗ ಅವುಗಳ ಸಂಖ್ಯೆ ಶತಕ ದಾಟಿಲ್ಲ. ಅವುಗಳಿಗೆಲ್ಲಾ ನೋಂದಣಿ ಸಂಖ್ಯೆ, ಚಾಲಕರಿಗೆ ಗುರುತಿನ ಬಿಲ್ಲೆ ಕೊಡುತ್ತಿದ್ದರು. ಮುನಿಸಿಪಾಲಿಟಿಯ ಅಧಿಕಾರವ್ಯಾಪ್ತಿಗೆ ಬರುತ್ತಿದ್ದವು. ಈಗಿನ ಆಟೋಗಳ ಹಾಗೆ ಅವುಗಳಿಗೆಂದೇ ಪ್ರತ್ಯೇಕ ಸ್ಟ್ಯಾಂಡ್ ನಿಲ್ದಾಣಗಳು ಇರುತ್ತಿತ್ತು .ನಾನೇ ಕಂಡಂತೆ ಚಾಮುಂಡಿಪುರಂ ಸರ್ಕಲ್, ಅಗ್ರಹಾರ, ಅರಮನೆಯ ಮುಂದುಗಡೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಕೆ ಆರ್ ಆಸ್ಪತ್ರೆಯ ಮುಂದೆ ಇಲ್ಲೆಲ್ಲಾ ಕುದುರೆ ಗಾಡಿಗಳು ಸಾಲಾಗಿ ನಿಂತಿರುತ್ತಿದ್ದವು . ಸಾಮಾನ್ಯವಾಗಿ ಜಟಕಾ ಮತ್ತು ಟಾಂಗಾ ಎರಡೂ ಕುದುರೆ ಗಾಡಿಗೆ ಬಳಸುವ ಪದಗಳಾದರೂ ಎರಡರ ರಚನೆಯಲ್ಲಿ ಸ್ವಲ್ಪ ವ್ಯತ್ಯಾಸವಿದೆ .ಎತ್ತಿನಗಾಡಿಯದೇ ಸ್ವಲ್ಪ ಪರಿಷ್ಕೃತ ಸುಧಾರಿತ ರೂಪ ಜಟಕಾ. ಆದರೆ ಟಾಂಗಾ ನವೀನ ಮಾದರಿಯ ಐಶಾರಾಮಿ ತರಹದ್ದು. ಮೈಸೂರು ಮಹಾರಾಜರಿಗೆಂದೇ ವಿಶೇಷ ವಿನ್ಯಾಸದಲ್ಲಿ ಮಾಡಿರುವ ಇಬ್ಬರೇ ಕೂರುವ ಇದನ್ನು ಅರಸರು ಬಹಳವಾಗಿ ಮೆಚ್ಚಿದ್ದರಿಂದ “ಷಾ ಪಸಂದ್” ಟಾಂಗಾಗಳು ಎನಿಸಿಕೊಂಡಿದ್ದವು . ಈಗೀಗ ಬರುತ್ತಿರುವ ಸಾರೋಟುಗಳು ಮತ್ತು ಐಷಾರಾಮಿ ಹಾಗೂ ವೈಭವೋಪೇತವಾಗಿರುವವು. ಆಗಲೇ ಹೇಳಿದೆನಲ್ಲ ದೂರ ಹೋಗುವುದಿದ್ದರೆ ಜಟಕಾದಲ್ಲಿ ಅಂತ . ಆಗೆಲ್ಲ ನಿಲ್ದಾಣಕ್ಕೆ ಬರುವುದು . ಆಗಲೂ ಈಗಿನ ಆಟೊ ಚಾಲಕರ ಹಾಗೆ ಸಾಹೇಬರುಗಳು (ಸಾಮಾನ್ಯ ಜಟಕಾ ಓಡಿಸುತ್ತಿದ್ದವರು ಮುಸಲ್ಮಾನರೇ ಆಗಿದ್ದರಿಂದ ಆ ಪದ ವಾಡಿಕೆಗೆ ಬಂದಿರಬಹುದು) ಆ ಕಡೆ ಬರಲ್ಲ ಅನ್ನುವುದು, ಜನ ಜಾಸ್ತಿಯಾಯಿತು ಅನ್ನುವುದು, ಆಣೆ ಕಾಸುಗಳಿಗೆ ಚೌಕಾಶಿ ಮಾಡುವುದು ಸಾಮಾನ್ಯವಾಗಿತ್ತು. ಇನ್ನೂ ಆ ಚೌಕಾಶಿಯೋ… ಜುಗ್ಗಾಡಿ ಜುಗ್ಗಾಡಿ ಇಬ್ಬರೂ ಅವರವರ ಬೆಲೆಗಳಲ್ಲಿ ನಿಂತು ಕಡೆಗೆ 1 ಮದ್ಯದ ಬೆಲೆಗೆ ಒಪ್ಪಿತವಾಗುತ್ತಿತ್ತು . ಚೌಕಾಶಿ ಮಾಡದೇ ಏನನ್ನೂ ವ್ಯವಹರಿಸುತ್ತಿರಲಿಲ್ಲ ಅಂದಿನ ಹಿರಿಯರು . ನಮಗೋ ಮಕ್ಕಳಿಗೆ ಬೇಗ ಕುದುರೆಗಾಡಿ ಏರುವ ಆಸೆ .ಕೆಲವೊಮ್ಮೆ ಏರಿದ ಕುದುರೆಗಾಡಿಯವನೊಂದಿಗಿನ ಚೌಕಾಶಿ ಗಿಟ್ಟದೆ ಮತ್ತೆ ಇಳಿದು ಬೇರೆ ಗಾಡಿಯಲ್ಲಿ ಕುಳಿತ ಪ್ರಸಂಗಗಳೂ ಇದೆ . ನಮಗೆ ಮಕ್ಕಳಿಗೆ ನೋಡಲು ಬಣ್ಣಬಣ್ಣವಾಗಿ ಅಂದವಾಗಿ ಕಾಣುತ್ತಿದ್ದ ಜಟಕಾದಲ್ಲಿ ಹೋಗುವ ಆಸೆ .ಹಿರಿಯರು ಕಟ್ಟುಮಸ್ತಾಗಿ ಆರೋಗ್ಯವಾಗಿ ಕುದುರೆ ಇರುವ ಗಾಡಿ ಆರಿಸುತ್ತಿದ್ದರು ಈ ರೀತಿ ತುಂಬಾ ಓಡಿಯಾಡಿದ ನೆನಪುಗಳು. ಒಂದೆರಡು ಘಟನೆ ನೆನಪಿದೆ ಎಷ್ಟರಮಟ್ಟಿಗೆ ಮೆದುಳಲ್ಲಿ ಹೂತಿದೆ ಎಂದರೆ ಇತ್ತೀಚೆಗೆ ಕುದುರೆಗಾಡಿಯಲ್ಲಿ ಕೂತಾಗಲೂ ಎಡಕ್ಕೆ ವಾಲಿದರೇ ಬಿದ್ದೇಬಿಟ್ಟೆನೇನೋ ಅಂತ ಹೃದಯ ಬಾಯಿಗೆ ಬಂದಿತ್ತು. ಓಂದು ಬಾರಿ ಜೂ ಗಾರ್ಡನ್ನಿಗೆ ಹೊರಟಿದ್ದೆವು. ನನಗೆ ಆಗ 4 / 5 ವರ್ಷ ಇರಬಹುದು. ಮನೆಗೆ ಬಂದ ನೆಂಟರೆಲ್ಲ ಸೇರಿ ಒಂದೇ ಜಟಕಾದಲ್ಲಿ ಹೇರಿಕೊಂಡೆವು. ಚಿಕ್ಕವಳೆಂದು ಚಾಲಕನ ಪಕ್ಕದ ಸೀಟು ಖಾಯಂ ಆಗ ನನಗೆ . ಮುಂಭಾರ ಹಿಂಭಾರ ಎಲ್ಲ ಸರಿದೂಗಿಸಿ ಹೊರಟ . ಖುಷಿಯಾಗಿಯೇ ಇತ್ತು . ಅರಮನೆಯ ಹಿಂದಿನ ದ್ವಾರದ ರಸ್ತೆಯಲ್ಲಿ ಬಂದು ಬಲಗಡೆಗೆ ತಿರುಗಬೇಕಿತ್ತು . ಎಡಗಡೆಗೆ ಸ್ವಲ್ಪ ತಗ್ಗಿನಲ್ಲಿ ಅರಮನೆಯ ಮಾರಮ್ಮನ ದೇವಸ್ಥಾನದ ಅವರಣ. ಬಲಗಡೆಗೆ ದೊಡ್ಡಕೆರೆ ಏರಿ ಇನ್ನೂ ಕೆರೆ ಮುಚ್ಚಿರಲಿಲ್ಲ. ನೀರಿತ್ತು. ಧಡ್ ಧಡ್ ಗಾಡಿಯ ಸದ್ದು, ಒಳಗಡೆ ದೊಡ್ಡವರ ಮಾತು, ಮಕ್ಕಳ ಕೇಕೆ, ಸಾಹೇಬನ ಬಾಜೂ ಬಾಜೂ ಇವುಗಳ ಮಧ್ಯೆ ಎಡ ಚಕ್ರದ ಕಡಾಣಿ ಕಳಚಿ ಬಿದ್ದ ಸದ್ದು ಯಾರಿಗೂ ಕೇಳಿಲ್ಲ . ಮುಂದೆ ಅಷ್ಟು ದೂರ ಓಡಿ ಗಾಡಿಯ ಚಕ್ರ ಕಳಚಿ ಮಾರಮ್ಮನ ಗುಡಿ ಹಳ್ಳಕ್ಕೆ ಗಾಡಿ ಒಮ್ಮೊಗವಾಗಿ ರಸ್ತೆಯಲ್ಲಿ ಉರುಳಿತ್ತು . ಮುಂದೆ ಕುಳಿತ ನಾನು ರಸ್ತೆಗೆ….. ಒಳಗಿದ್ದವರು ಒಬ್ಬರ ಮೇಲೊಬ್ಬರು. ಎಲ್ಲರದೂ ಕಿರುಚಾಟ .ಸಣ್ಣಪುಟ್ಟ ತರಚು ಗಾಯ ನೆನಪಿನಲ್ಲಿ ಅವತ್ತಿನವೇ ಕ್ಷಣಗಳು ಇನ್ನೂ ಗಿರಕಿ ಹೊಡೆಯುತ್ತೆ .ಅಕಸ್ಮಾತ್ ಬಲ ಬದಿಯ ಕೆರೆಗೆ ಬಿದ್ದಿದ್ದರೆ ಏನು ಗತಿ?ಇದನ್ನು ಬರೆಯಲು ನಿಮ್ಮ ಮುಂದೆ ನಾನೇ ಇರುತ್ತಿರಲಿಲ್ಲವೇನೋ ? ಮುಂದೆ ಎಷ್ಟೋ ದಿನ ಜಟಕಾ ಹತ್ತಲು ಭಯಪಡುತ್ತಿದ್ದೆನಂತೆ . ಅಣ್ಣ 1 ಬಾರಿ ಪಕ್ಕದಲ್ಲಿ ಕೂರಿಸಿಕೊಂಡು 1 ಸುತ್ತು ಹೊಡೆಸಿಕೊಂಡು ಬಂದಮೇಲೆ ಸರಿ ಹೋದೆನಂತೆ. ಇನ್ನೊಂದು ಸ್ವಲ್ಪ ನಗೆಯ ಪ್ರಸಂಗ .ಆಗೆಲ್ಲ ಶ್ರೀರಂಗಪಟ್ಟಣ ಪ್ರವಾಸ ಅಂದರೆ ಬಸ್ ನಲ್ಲಿ ಅಲ್ಲಿಗೆ ಹೋಗಿ 1 ಜಟಕಾ ಮಾತಾಡಿಕೊಂಡು ದೇವಸ್ಥಾನ ನಂತರ ದರಿಯಾದವಲತ್ ಗುಂಬಜ್ ಮತ್ತು ಸಂಗಮಗಳಿಗೆ ಭೇಟಿ (ನಿಮಿಷಾಂಬ ಆಗಿನ್ನೂ ಪ್ರಸಿದ್ಧವಾಗಿರಲಿಲ್ಲ) . ಹಾಗೆ ಗಾಡಿಯಲ್ಲಿ ಯಥಾಪ್ರಕಾರ ಡಬಲ್ ಜನ ತುಂಬಿದ್ದೆವು . ದೇವಸ್ಥಾನ ಮುಗಿಸಿ ದರಿಯಾದೌಲತ್ ಕಡೆಗೆ ಹೊರಟರೆ ದಾರಿಯಲ್ಲಿ 1 ಸಿನಿಮಾ ಟೆಂಟ್ . ಕುದುರೆ ಅಲ್ಲಿಂದ ಮುಂದಕ್ಕೆ ಹೋಗ್ತಾನೇ ಇಲ್ಲ .ಪೂಸಿ ಹೊಡೆದರೂ ಇಲ್ಲ ಚಾಟಿ ಏಟಿಗೂ ಬಗ್ತಿಲ್ಲ. ಸಾಹೇಬ ಹೇಳಿದ್ದು ಬರೀ ಅಲ್ಲಿ ತನಕ ಮಾತ್ರ ಸವಾರಿ ಬರ್ತಿದ್ದಂತೆ. ಮುಂದೆ ಹೋಗ್ಲಿಲ್ಲ ಅದಕ್ಕೆ ಅಂತ . ಕಡೆಗೆ ಕುದುರೆ ಹಟಾನೇ ಗೆದ್ದು ನಮ್ಮನ್ನೆಲ್ಲ ಬೇರೆ ಗಾಡಿಗೆ ಹತ್ತಿಸಲಾಯಿತು. ಮನುಷ್ಯರಷ್ಟೇ ಅಲ್ಲ ಕುದುರೆಗಳಿಗೂ ಎಂತಹ “ಅಭ್ಯಾಸಬಲ” ನೋಡಿ ! ಆಗೆಲ್ಲ ಹೊಸ ಮದುವಣಿಗರು ಮೈಸೂರಿಗೆ ದಸರಾಗೆ ಬರುವ ವಾಡಿಕೆ . ಹೊಸಜೋಡಿಗಳು ಯಾವಾಗಲೂ ಷಾಪಸಂದ್ ಟಾಂಗಾದಲ್ಲಿ ಇಬ್ಬರೇ ಕೂತು ದೀಪಾಲಂಕಾರ ನೋಡಲು ಹೋಗುವುದು ಒಂದು ರಿವಾಜು. ಹೆಮ್ಮೆಯಿಂದ ನೆಂಟರಿಷ್ಟರಿಗೆಲ್ಲಾ ಕೊಚ್ಚಿಕೊಳ್ಳುವ ವಿಷಯವಾಗಿತ್ತು ಆಗ ಅದು. ಹಾಗೆ ಆ ಬಾರಿ ನಮ್ಮ ಮನೆಗೂ ನವ ವಿವಾಹಿತ ಜೋಡಿ ಬಂದಿತಂತೆ .ಹೊರಡುವ ಮೊದಲು ಸುಮ್ಮನೆ ಸೌಜನ್ಯಕ್ಕೆಂದು ನನ್ನ ಕರೆದರೆ ಹೋಗಿಯೇ ತೀರುವೆನೆಂದು ನನ್ನ ಹಠವಂತೆ . ಅಪ್ಪ ಅಮ್ಮ ಎಷ್ಟು ಹೇಳಿದರೂ ಕೇಳದೆ ಅತ್ತು ಕರೆದು ಅವರ ಜತೆ ಹೊರಟೇಬಿಟ್ಟೆನಂತೆ. ಪಾಪ ನನ್ನನ್ನು ಎಷ್ಟು ಬಯ್ದುಕೊಂಡಿದ್ದರೋ ಏನೋ ..ಆದರೆ ಇದೆಲ್ಲಾ ಒಂದು ಚೂರೂ ನೆನಪಿಲ್ಲ ನನಗೆ. ಅಮ್ಮ ಹೇಳುತ್ತಿದ್ದುದು ಅಷ್ಟೆ ಬರಬರುತ್ತಾ ಪೆಟ್ರೋಲ್ ವಾಹನಗಳು ಹೆಚ್ಚಾಗಿ ದ್ವಿಚಕ್ರ ವಾಹನ, ಚತುಷ್ಚಕ್ರ ವಾಹನಗಳ ಭರಾಟೆ ಹೆಚ್ಚಿದ ಮೇಲೆ ಸಮಯದ ಹಿಂದಿನ ಓಟದ ಸ್ಪರ್ಧೆಯಲ್ಲಿ ನಿಧಾನಗತಿಯ ಈ ಸಂಚಾರ ಸಾಧನ ಮೂಲೆಗುಂಪಾಯಿತು. ಒಂದಷ್ಟು ದಿನ ಸರಕು ಸಾಗಾಣಿಕೆ ವಾಹನವಾಗಿ ಮುಂದುವರಿಯಿತು. ಈಗ ಸವಾರಿಯ ಶೋಕಿಯ ಅನುಭವಕ್ಕಷ್ಟೇ ಬಳಕೆ. ಪ್ರವಾಸಿಗರೇ ಹೆಚ್ಚಿನ ಸಂಖ್ಯೆಯ ಗ್ರಾಹಕರು . ಇದನ್ನೇ ಉದರಂಭರಣಕ್ಕಾಗಿ ನೆಚ್ಚಿದ್ದ ಕುಟುಂಬಗಳಲ್ಲಿ ಎಷ್ಟೋ ಕುಟುಂಬಗಳು ಬೇರೆ ಉದ್ಯೋಗವನ್ನರಸಿ ಹೋಗಿವೆ . ಜಟಕಾದ ಬಗ್ಗೆ ಹೇಳಿದ ಮೇಲೆ ಕುದುರೆಯ ಬಗ್ಗೆ ಒಂದೆರಡು ಮಾತು ಹೇಳದಿದ್ದರೆ ಪೂರ್ಣವಾಗುವುದಿಲ್ಲ .ಮುಂಚೆ ಈ ಕುದುರೆಗಳನ್ನು ದೂರದ ಗಳಿಂದ ತರಿಸಿಕೊಳ್ಳುತ್ತಿದ್ದರಂತೆ . ಕುದುರೆಯ ಮಾಲೀಕರು ಗಳಂತೂ ಅದನ್ನು ತಮ್ಮ ಮಕ್ಕಳಷ್ಟೇ ಪ್ರೀತಿಯಿಂದ ಸಾಕಿ ಹುರುಳಿ ಹಸಿಹುಲ್ಲು ಒಣಹುಲ್ಲುಗಳನ್ನು ಕೊಡುತ್ತಿದ್ದರು. ಅವುಗಳಿಗೆ ಅಲಂಕಾರ ಅಂತೂ ಪೈಪೋಟಿಯಲ್ಲಿ ಮಾಡುತ್ತಿದ್ದರು. ಬಣ್ಣಬಣ್ಣದ ಮುತ್ತಿನ ಗೆಂಡೆಗಳು ಕುಚ್ಚುಗಳು ನೋಡಲು 2 ಕಣ್ಣು ಸಾಲ್ತಿರಲಿಲ್ಲ . ಹಾಗೆಯೇ ಬಡಕಲಾದ ನಿಶ್ಶಕ್ತವಾದ ಕಾಲು ಮುರಿದುಕೊಂಡ ವಯಸ್ಸಾದ ಕುದುರೆಗಳನ್ನು ಹಾಗೆಯೇ ಬೀದಿಗೆ ಬಿಟ್ಟು ಬಿಡುತ್ತಿದ್ದರಿಂದ ಬೀದಿ ಹಸುಗಳ ತರಹ ಬೀದಿ ಕುದುರೆಗಳ ಕಾಟವೂ ಇರುತ್ತಿತ್ತು ಆಗೆಲ್ಲ . ಮೇರಾ ರಾಜ ಬೇಟಾ, ಮೇರಾ ಸೋನಾ ಬೇಟಾ ಎಂದೆಲ್ಲಾ ಮುದ್ದಿಸುವಂತೆಯೇ ಚಾಟಿಯೇಟು ಹೊಡೆಯುವಾಗ ಹರಾಮ್ ಜಾದೇ ಬೈಗುಳವೂ ಇರುತ್ತಿತ್ತು. ಒಟ್ಟಿನಲ್ಲಿ ಕುದುರೆ ಗಾಡಿ ಓಡಿಸುವವರ ಮನೆಯ ಸದಸ್ಯನಂತೆಯೇ ಆಗಿಬಿಟ್ಟಿರುತ್ತಿತ್ತು ಕುದುರೆಗಳೂ. ಪಾರಂಪರಿಕ ವಸ್ತುಗಳನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ. ಮೈಸೂರು ಅಂದರೆ ಅರಮನೆ, ಮಲ್ಲಿಗೆ, ವೀಳೆಯದೆಲೆ, ಬದನೆಕಾಯಿಗಳ ಹಾಗೆ ಟಾಂಗಾಗಳು ನೆನಪಿನ ಬೆಸುಗೆಗೆ ಜೋಡಿಸಿಕೊಳ್ಳುತ್ತದೆ. ಪ್ರವಾಸಿಗರಿಗೆ ಇದರ ಪರಿಚಯಕ್ಕೆಂದು NERM ಯೋಜನೆಯಡಿ ಹೊಸ ಕುದುರೆಗಾಡಿಗಳನ್ನು ಕೊಳ್ಳಲು ಸಾಲ ರೂಪದಲ್ಲಿ ಧನಸಹಾಯ ಮಾಡಿ ಈ ಸಾಂಸ್ಕೃತಿಕ ಸಂಚಾರಿ ರಾಯಭಾರಿಗೆ ಕಾಯಕಲ್ಪ ಕಲ್ಪಿಸಲಾಗುತ್ತಿದೆ ಅದೇನೇ ಆದರೂ ಜನತೆಯೂ ಸಹ ಇದನ್ನು ಪ್ರೋತ್ಸಾಹಿಸುವ ಮೂಲಕ ಮೈಸೂರಿನ ಹೆಮ್ಮೆಯ ಪ್ರಸಿದ್ಧಿಯ ಟಾಂಗಾಗಳು ಉಳಿಯುವಂತೆ ಮಾಡಬೇಕು . ಇವು ಈಗ ವಿರಳವಾಗಿದ್ದರೂ ಪಳೆಯುಳಿಕೆಯಾಗಿಲ್ಲ ಎಂಬುದಷ್ಟೇ ನೆಮ್ಮದಿ ತರುವ ವಿಷಯ . ಇನ್ನೂ ಜಟಕಾ ಅಂದರೆ ಕನ್ನಡ ಸಾಹಿತ್ಯ ಪ್ರೇಮಿಗಳಿಗೆಲ್ಲ ಡಿವಿಜಿಯವರ ಈ ಪ್ರಸಿದ್ಧ ಮಂಕುತಿಮ್ಮನ ಕಗ್ಗ ನೆನಪಿಗೆ ಬಾರದೆ ಇರದು . ಬದುಕು ಜಟಕಾ ಬಂಡಿ ವಿಧಿಯದರ ಸಾಹೇಬ ಕುದುರೆ ನೀನಂ ಅವನು ಪೇಳ್ದಂತೆ ಪಯಣಿಗರು ಮದುವೆಗೋ ಮಸಣಕೋ ಹೋಗೆಂದ ಕಡೆಗೋಡು ಪದಕುಸಿಯೆ ನೆಲವಿಹುದು ಮಂಕುತಿಮ್ಮ _ ಡಿ ವಿ ಜಿ ಇಲ್ಲಿ ಕುದುರೆ ಗಾಡಿಗೂ ಮನುಷ್ಯನ ಜೀವನಕ್ಕೂ ಸಾಮ್ಯತೆಯನ್ನು ಹೇಳುತ್ತಾ ಹಿರಿದಾದ ಬಾಳ ತತ್ವವನ್ನು ಅನಾವರಣಗೊಳಿಸಿದ್ದಾರೆ. ನಿಜ! ನಮ್ಮ ಬದುಕು ಒಂದು ಜಟಕಾ ಗಾಡಿಯೇ. ನಾವೆಲ್ಲಾ ಹೇಳಿದಂತೆ ಮಾತ್ರ ನಡೆಯಬೇಕಾದ ಕುದುರೆಗಳು. ಓಡಿಸುವ ಸಾಹೇಬ ವಿಧಿ! ಆ ದೇವರು. ಅವನ ಮರ್ಜಿ ಇದ್ದೆಡೆಗೆ ನಮ್ಮ ಪಯಣ. ನಲಿವು ಸಂತೋಷದ ಮದುವೆ ಮನೆಗಾದರೂ ಆಗಿರಬಹುದು ; ನೋವು ಸಂಕಟದ ಸ್ಮಶಾನಕ್ಕಾದರೂ ಕರೆದೊಯ್ಯಬಹುದು . ಕರ್ತವ್ಯಗಳ ಛಡಿ ಏಟಿನ ಜವಾಬ್ದಾರಿಗಳ ಭಯ ಕೆಲವೊಮ್ಮೆ ಮುನ್ನಡೆಸಿದರೆ, ಹುರುಳಿ ಹುಲ್ಲು ವಿರಾಮದ ಆಮಿಷಗಳು ವೇಗ ಹೆಚ್ಚಿಸಬಹುದು. ಆದರೆ ಪಯಣವಂತೂ ನಿರಂತರ . ಇನ್ನು ನಡೆಯಲಾರೆ ನನ್ನಿಂದಾಗದು ಎಂದು ಕುಸಿಯಲೂ ಬಹುದು . ಆಶ್ರಯ ಕೊಡಲು ಭೂಮಿತಾಯಿ ಇದ್ದಾಳೆ ತಾತ್ಕಾಲಿಕ ವಿರಾಮದ ಸಾವರಿಸಿ ಏಳುವವರೆಗೂ ಆಸರೆಯಾಗಿ ಅಥವಾ ಮುಂದೆ ಏಳಲೇ ಆಗದು ಎಂದಾಗ ಶಾಶ್ವತವಾಗಿ ಮಲಗಲು ತಾವು

