ಹೀಗೆ ಗಾಂಧೀಜಿಯವರಿಗೂ ಕರ್ನಾಟಕಕ್ಕೂ ಒಂದು ಧೃಡವಾದ ನೆಂಟು ಇತ್ತು. ಅವರ ಚಳುವಳಿಗಳಲ್ಲಿ ಕರ್ನಾಟಕದ ಕಾರ್ಯಕರ್ತರೂ ಸಹ ಸಕ್ರೀಯವಾಗಿ ತಮ್ಮ ನೆರವನ್ನು ಕೊಟ್ಟರು.
‘ಆಡದೇ ಮಾಡುವವ ರೂಢಿಯೊಳಗುತ್ತಮ’ ಎಂದು ಹೇಳುವುದಕ್ಕೂ ಸೀಮಿತಾರ್ಥಗಳೇ ಇರುತ್ತವೆ. ಕರ್ತವ್ಯ, ಜವಾಬ್ದಾರಿ ನಿರ್ವಹಣೆಯ ವಿಚಾರದಲ್ಲಿ; ಮಾನವೀಯತೆ, ಅನುಕಂಪೆ ತೋರುವ ಸಂಗತಿಗಳಲ್ಲಿ; ಸಹಾಯ ಹಸ್ತ ಚಾಚುವ ಸಂದರ್ಭಗಳಲ್ಲಿ ಇದು ಅನ್ವಯಿಸಬಹುದೇ ಹೊರತು ಆಡು, ಮಾತನಾಡು, ಮಾತನಾಡಿದ್ದನ್ನು ಮಾಡು ಎಂಬುದನ್ನು ಎಲ್ಲ ವಿಚಾರಕ್ಕೂ ಪರಿಭಾವಿಸಿ ನಡೆದುಕೊಳ್ಳುವುದು ಅಗತ್ಯವಿಲ್ಲ.
ಅಂಕಣ ಬರಹ
‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ.
ಸಾಧಕಿಯರ ಯಶೋಗಾಥೆ
ಅಂಕಣ ಬರಹ ಗಾಂಧಿ ಹಾದಿ ಸ್ವಾತಂತ್ರ ಮತ್ತು ಸಮಾನತೆಯ : ಗಾಂಧೀಜಿಯ ದೃಷ್ಟಿಕೋನ ದೇಶಾದ್ಯಂತ ಕೋವಿಡ್-೧೯ ಎರಡನೆಯ ಅಲೆ ಮುಗಿದು ಮೂರನೆಯ ಅಲೆಯ ಭೀತಿಯಲ್ಲಿ ಇದ್ದೇವೆ. ಭಾರತಕ್ಕೆ ಸ್ವಾತಂತ್ರ್ಯ ಬಂದು ೧೫ನೇ ಆಗಸ್ಟ್,೨೦೨೧ಕ್ಕೆ ೭೫ ವಸಂತಗಳು ಪೂರ್ಣಗೊಳ್ಳಲಿದೆ. ಇದರ ಸವಿನೆನಪಿಗಾಗಿ ಕೇಂದ್ರ ಸರಕಾರದ ನಿರ್ದೇಶನದಂತೆ ೧೨ನೇ ಮಾರ್ಚ್೨೦೨೧ ರಂದು ದೇಶದ ೭೫ ಐತಿಹಾಸಿಕ ಸ್ಥಳಗಳಲ್ಲಿ ’೭೫ನೇ ಸ್ವಾತಂತ್ರ್ಯೋತ್ಸವದ ಆಜಾದ್ ಕಾ ಅಮೃತ ಮಹೋತ್ಸವ’ ದ ಕಾರ್ಯಕ್ರಮಗಳು ಜರುಗಿತು. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವು ಮಹನೀಯರ ತ್ಯಾಗ, ಬಲಿದಾನ ಅಡಗಿದ್ದು, ಮಹಾತ್ಮ ಗಾಂಧೀಜಿಯವರ ನಾಯಕತ್ವದಲ್ಲಿ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಅಹಿಂಸಾತ್ಮಕ ಹೋರಾಟದಿಂದ ೧೫ನೇ ಆಗಸ್ಟ, ೧೯೪೭ರಂದು ಭಾರತವು ಸ್ವತಂತ್ರವಾಯಿತು. ಅದರ ಮಹತ್ವವನ್ನು ಇಂದಿನ ಯುವ ಪೀಳಿಗೆಗೆ ಮನವರಿಕೆ ಮಾಡುವ, ಅವರಲ್ಲಿ ದೇಶಭಕ್ತಿಯನ್ನು ಬಿತ್ತುವ ಸದುದ್ದೇಶದಿಂದ ದೇಶದ ೭೫ ಐತಿಹಾಸಿಕ ಸ್ಥಳಗಳಲ್ಲಿ ೭೫ ವಾರಗಳ ವರೆಗೆ ರಾಷ್ಟ್ರದಾದ್ಯಂತ ವಿವಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು. ೭೫ ವಾರಗಳ ವರೆಗೆ ರಾಷ್ಟ್ರದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅಮೃತ ಮಹೋತ್ಸವದ ಸಂಭ್ರಮಾಚರಣೆಯನ್ನು ಆಚರಿಸಲಾಗುವದು. ಈ ಐತಿಹಾಸಿಕ ಕಾರ್ಯಕ್ರಮ ವಿಶೇಷವಾಗಿರುವದು . ನಮ್ಮ ಗತಕಾಲವನ್ನು ಸ್ಮರಿಸುವದು ಅಗತ್ಯವಾದುದು. ದೇಶದ ಹಿರಿಮೆ- ಗರಿಮೆ , ವೈವಿಧ್ಯತೆ, ಸಾರ್ವಭೌಮತೆ ಹಾಗೂ ಸ್ವಾತಂತ್ರ್ಯದ ಬಗೆಗಿನ ಚರಿತ್ರೆ ಸ್ವಾರಸ್ಯಕರ ಹಾಗೂ ಅರ್ಥಗರ್ಭಿತವಾದುದು. ಪ್ರತಿ ದೇಶದ ಸ್ವಾತಂತ್ರ್ಯ ಚರಿತ್ರೆಯಲ್ಲಿ ಸ್ವಾತಂತ್ರ್ಯ ಪಡೆಯಲು ಹುತಾತ್ಮರಾದವರನ್ನು ತ್ಯಾಗ- ಬಲಿದಾನ ಮಾಡಿದವರನ್ನು ನೆನೆಯುವದು ಹಾಗೂ ಸ್ಮರಿಸುವದು ಹಾಗೂ ದೇಶದ ಸ್ವಾತಂತ್ರ್ಯ ಪ್ರೇಮ, ಪ್ರಜಾಸತ್ತಾತ್ಮಕತೆ ಹಾಗೂ ಸಾರ್ವಭೌಮತೆಯನ್ನು ರಕ್ಷಿಸಿಕೊಂಡು ಹೋಗುವದು ಪ್ರತಿ ಪ್ರಜೆಯ ಆದ್ಯ ಕರ್ತವ್ಯ. ರಾಜಕೀಯ ಸ್ವಾತಂತ್ರ್ಯವು ಗಾಂಧೀಜಿಯವರಿಗೆ ಸ್ವರಾಜ್ಯವಾಗಿತ್ತು. ಸ್ವರಾಜ್ಯವನ್ನು ಕೂಡಾ ಸತ್ಯ ಮತ್ತು ಅಹಿಂಸಾ ಮಾರ್ಗದಿಂದ ಪಡೆಯುವದಾಗಿತ್ತು. ಸತ್ಯವೇ ದೇವರು ಎಂಬುದು ಗಾಂಧೀಜಿಯವರ ಭಾವನೆ ರಾಜಕೀಯ ಸ್ವಾತಂತ್ರ್ಯವೆಂ ದರೇನು, ಸ್ವರಾಜ್ಯ ಎಂಬುದು ಗಾಂಧೀಜಿಯವರ ವಾದ. ಸ್ವರಾಜ್ಯವನ್ನು ಸತತ ಹೋರಾಟ ಮತ್ತು ಪ್ರಯತ್ನದಿಂದ ಪಡೆಯುವುದು ಮತ್ತು ಬ್ರಿಟಿಷ್ ಸರ್ಕಾರದ ವಿರುದ್ಧ ಅತೃಪ್ತಿಯೆಂಬ ದ್ವೇಷದ ಅಲೆಯನ್ನು ಎಬ್ಬಿಸುವುದು, ಪ್ರತಿಯೊಬ್ಬ ಭಾರತೀಯನ ಧರ್ಮಯುತವಾದ ಕಾರ್ಯ ಎಂದು ಹೇಳಿ ಅಂದಿನ ಬಲಿಷ್ಠ ರಾಷ್ಟ್ರಗಳಿಗೆ ಎದುರಾಗಿ ಎದೆ ತಟ್ಟಿ ನಿಲ್ಲುವಂತೆ ಗಾಂಧೀ ಕರೆ ಕೊಟ್ಟರು. ಇದರಿಂದ ಬಲಿಷ್ಠ ರಾಷ್ಟ್ರಗಳ ನೈತಿಕತೆಗೆ ಧಕ್ಕೆ ತರುವದೇ ಅವರ ಉದ್ದೇಶವಾಗಿತ್ತು. ಗಾಂಧೀಜಿಯವರು ತಮ್ಮ ರಾಜಕೀಯದ ಬಗ್ಗೆ ಹೇಳುತ್ತಾ ವ್ಯಕ್ತಿ ಸ್ವಾತಂತ್ರ್ಯವನ್ನು ನಿರಾಕರಿಸಿ ಯಾವುದೇ ಸಮಾಜ ನಿರ್ಮಾಣವಾಗುವುದು ಸಾಧ್ಯವಿಲ್ಲ. ಇದು ವ್ಯಕ್ತಿ ಸ್ವಭಾವಕ್ಕೆ ವಿರುದ್ದವಾಗಿದೆ. ವ್ಯಕ್ತಿ ತನ್ನದೇ ಆದ ಮನಸ್ಸನ್ನು ಹೊಂದಿರದೆ ವ್ಯಕ್ತಿ ಜೀವಿಸಲು ಸಾಧ್ಯವಿಲ್ಲ. ಸಮಾನವಾದ ಸಾಮಾಜಿಕ ಮತ್ತು ಆರ್ಥಿಕವಾದ ಅವಕಾಶಗಳನ್ನು ಹೊಂದಿರಬೇಕು ಕರ್ತವ್ಯದ ಜೊತೆಗೆ ಸ್ವಾತಂತ್ರ್ಯ ನಿಕಟ ಸಂಬಂಧ ಹೊಂದಿರುತ್ತದೆ. ಮತ್ತು ಪ್ರತಿಯೊಬ್ಬರು ಆ ಬಗೆಯ ಸಮಾನ ಅವಕಾಶಗಳಿಗೆ ಜವಾಬ್ದಾರರಾಗಬೇಕು ಎಂದು ಗಾಂಧೀಜಿಯವರು ಹೇಳಿದರು. ಗಾಂಧೀಜಿಯವರು ಸ್ವಾತಂತ್ರ್ಯದ ಬಗ್ಗೆ ಹೊಂದಿದ್ದ ಅಭಿಪ್ರಾಯಗಳು ಆಂಗ್ಲೋ ಅಮೆರಿಕನ್ ಉದಾರವಾದಿ ಸಾಂಪ್ರದಾಯವಾದಿಗಳು ಸ್ವಾತಂತ್ರ್ಯದ ಬಗ್ಗೆ ಹೊಂದಿದ್ದ ತತ್ವಗಳಿಗಿಂತ ಭಿನ್ನವಾಗಿತ್ತು. ಸಾಂಪ್ರದಾಯಿಕ ಅರ್ಥದಲ್ಲಿ ಹೇಳುವುದಾದರೆ ತಮ್ಮದೇ ಆದ ಆಪೇಕ್ಷೆಗಳನ್ನು ಅಭಿಪ್ರಾಯಗಳನ್ನು ಅಥವಾ ವಿರೋದಗಳನ್ನು ವ್ಯಕ್ತಪಡಿಸಲು ಹೊಂದಿರುವುದೇ ಸ್ವಾತಂತ್ರ್ಯ, ತಮ್ಮ ಹಕ್ಕುಗಳ ಮೂಲಕ ಸ್ವಾಭಾವಿಕವಾಗಿಯೇ ತಮ್ಮ ಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಕೂಡ ಸ್ವತಂತ್ರರು ಎಂಬ ಅರ್ಥವನ್ನೂಳಗೊಂಡಿದೆ. ಈ ಅರ್ಥದಲ್ಲಿ ಸ್ವಾತಂತ್ರ್ಯವೆಂದರೆ ಪ್ರತಿಯೊಬ್ಬರು ಯಾವುದೇ ಅಡೆತಡೆಯಿಲ್ಲದೆ ತಮ್ಮದೇ ಆದ ಹಿತಾಸಕ್ತಿಗಳನ್ನ ಈಡೇರಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಸಾಮರ್ಥವನ್ನು ಸ್ವಾತಂತ್ರ್ಯ ಎಂದು ಹೇಳಲಾಗಿದೆ. ಈ ಬಗೆಯ ನಿರ್ಭಂಧ ರಹಿತ ಸ್ವಾತಂತ್ರ್ಯ ಹಾಲ್ಸ್ ಪ್ರತಿಪಾದಿಸಿದ ಸ್ವಾಭಾವಿಕ ರಾಜ್ಯದ ಸ್ಥಿತಿಗೆ ಕೊಂಡೊಯುತ್ತದೆ. ಅಂತಹ ರಾಜ್ಯದಲ್ಲಿ ಅರಾಜಕತೆ, ಅಸ್ಥಿರತೆ, ಕೊಲೆ, ಸುಲಿಗೆ, ದ್ವೇ಼ಷ ಮತ್ತು ಅಸೂಯೆಗಳು ಕಂಡು ಬರುತ್ತದೆ. ಈ ತತ್ಪರಿಣಾಮಗಳಿಂದಲೇ ಸ್ವಾತಂತ್ರ್ಯವನ್ನು ನಿರ್ಬಂಧಿಸಲು ದಾರಿಯಾಗುತ್ತದೆ. ಬಹುತೇಕ ಉದಾರವಾದಿ ಬರಹಗಾರರು ಸರಕಾರವು ವ್ಯಕ್ತಿಗಳ ಕೆಲವು ನಿರ್ದಿಷ್ಟವಾದ ಹಕ್ಕುಗಳಲ್ಲಿ ಮಾತ್ರ ಮಧ್ಯಸ್ಥಿಕೆ ವಹಿಸಬೇಕು ಹಾಗೂ ಯಾರು ಹಕ್ಕುಗಳನ್ನು ಉಲ್ಲಂಘಿಸುತ್ತಾರೆಯೋ ಅಂತಹವರ ವಿರುದ್ದ ಬಲತ್ಕಾರವನ್ನು ಕೂಡ ಬಳಸಬಹುದು ಎಂದಿದ್ದಾರೆ.ಈ ಬಗೆಯ ಸ್ವಾತಂತ್ರ್ಯಕ್ಕಾಗಿ ಬಳಸಿರುವ ಮಾರ್ಗಗಳು ಗಾಂಧೀಜಿಯವರ ಅರ್ಥದಲ್ಲಿ ಹಲವಾರು ನ್ಯೂನತೆ ಅಥವಾ ದೋಷಗಳನ್ನೂ ಒಳಗೊಂಡಿದೆ. ಪ್ರಥಮವಾಗಿ ಇದು ಸರಕಾರದಿಂದ ಹಿಂಸೆಯನ್ನು ಅನುಮೋದಿಸುತ್ತದೆ. ಕೆಲವೊಂದು ಹಕ್ಕುಗಳನ್ನು ಆಚರಣೆಗೆ ತರಲು ಬಲಾತ್ಕಾರವನ್ನು ಉಪಯೋಗಿಸಲು ರಾಜ್ಯಕ್ಕೆ ಅಧಿಕಾರವನ್ನು ನೀಡುತ್ತದೆ. ಗಾಂಧೀಜಿಯವರ ಪ್ರಕಾರ ಇದು ವ್ಯಕ್ತಿಯ ನೈತಿಕ ಸ್ವಾಯತ್ತತೆಯನ್ನು ಹಾಳು ಮಾಡುತ್ತದೆ. ಪ್ರಾರಂಭದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ರಾಜ್ಯದಿಂದ ಒದಗಿ ಬಂದಂತಹ ದೊಡ್ಡ ಅಪಾಯವನ್ನು ಉದಾರವಾದ ಕಂಡುಕೊಂಡಿತ್ತು. ಆದರೆ ಗಾಂಧೀಜಿಯವರು ಸ್ವಾತಂತ್ರ್ಯದ ಬಗೆಗಿನ ಅಭಿಪ್ರಾಯವನ್ನು ಒಪ್ಪಲಾದರೂ. ಅವರ ಸ್ವಾತಂತ್ರ್ಯದ ಕಲ್ಪನೆ ಅಪರಿಪೂರ್ಣವಾಗಿತ್ತು. ಸ್ವಾತಂತ್ರ್ಯದ ಬಗ್ಗೆ ಸಾಂಪ್ರದಾಯಿಕ ಆರ್ಥಿಕ ಉದಾರವಾದಿಗಳು ಹೊಂದಿದ್ದ ನಿಲುವಿಗಿಂತ ಭಿನ್ನವಾಗಿ ಗಾಂಧೀಜಿಯವರು ಹೊಂದಿದ್ದರು. ಕೇವಲ ರಾಜ್ಯದಿಂದ ಮಾತ್ರವಲ್ಲದೆ ಸ್ವಾತಂತ್ರ್ಯ ಹಲವಾರು ಶಕ್ತಿಗಳಿಗಿಂತ ಅಘಾತಕ್ಕೊಳಪಟ್ಟಿದೆ. ಆರ್ಥಿಕ ಅಸಮಾನತೆ ಇನ್ನಿತರರ ಮೇಲೆ ಅವಲಂಬಿಸಿರುವಂತೆ ಮಾಡಿರುವುದು ಕೈಗಾರೀಕರಣ, ನಿರುದ್ಯೋಗವನ್ನು ಸೃಷ್ಟಿಸಿರುವುದು ಅನಮ್ಯ ಜಾತಿ ವ್ಯವಸ್ಥೆ ಮತ್ತು ಅಸ್ಫೃಶ್ಯತೆಗಳು ಜನತೆಗೆ ಅವರ ಸ್ವಾಯುತ್ತತೆಯನ್ನು ನಿರಾಕರಿಸಿದೆ. ವಸಾಹತುಶಾಹಿ ವ್ಯವಸ್ಥೆಯೂ ಕೂಡ ಸಮೃದ್ಧ ಅವಕಾಶಗಳನ್ನು ಕನಿಷ್ಠಗೊಳಿಸಿದೆ ಎಂದು ಗಾಂಧೀಜಿಯವರು ನಂಬಿದ್ದರು. ಸ್ವಾತಂತ್ರ್ಯ ಎಂಬುದು ಸಾಮಾಜಿಕ ಸಮಾನತೆಯನ್ನು ಒಳಗೊಂಡಿದ್ದು ಹಲವಾರು ಮೂಲಗಳಿಂದ ಸ್ವಾತಂತ್ರ್ಯಕ್ಕೆ ಅಡೆತಡೆಗಳು ಬರುತ್ತವೆ. ಆದ್ದರಿಂದ ಸ್ವಾತಂತ್ರ್ಯಕ್ಕೆ ಕನಿಷ್ಠ ಪ್ರಮಾಣದ ಅಡೆತಡೆಗಳು ಉಂಟಾಗುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.ಗಾಂಧೀಜಿಯವರ ಪ್ರಕಾರ ಉದಾರವಾದಿ ಸ್ವಾತಂತ್ರ್ಯದ ರಚನೆಯು ಕೂಡ ದೋಷ ಪೂರಿತವಾಗಿದೆ. ಸಾಮಾಜಿಕ ಆಧಾರಿತ ಮಾನವೀಯ ಜೀವನದ ಪ್ರಾಮುಖ್ಯತೆಯನ್ನ ಉದಾರವಾದಿ ಸ್ವಾತಂತ್ರ್ಯ ತಿರಸ್ಕರಿಸುತ್ತದೆ. ನಮ್ಮ ಎಲ್ಲಾ ಕ್ರಿಯೆಗಳಿಗೆ ಕೆಲಸಗಳಿಗೆ ಅಥವಾ ಚಟುವಟಿಕೆಗಳಿಗೆ ನಾವೇ ಜವಾಬ್ದಾರಿಯಾಗಿರಬೇಕು. ಹಕ್ಕುಗಳು ಮತ್ತು ಜವಾಬ್ದಾರಿಗಳೆರಡೂ ಪರಸ್ಪರ ಅನ್ಯೋನತೆಯಿಂದ ಕೂಡಿವೆ. ಇವೆರಡರಲ್ಲಿ ಯಾವುದಾದರೂ ಒಂದು ಇಲ್ಲದಿದ್ದಲ್ಲಿ ಅದರ ನಿಜವಾದ ಸತ್ವವನ್ನು ಕಳೆದುಕೊಳ್ಳುತ್ತದೆ, ಹಕ್ಕು ಮತ್ತು ಕರ್ತವ್ಯಗಳೆರಡು ಪರಸ್ಪರ ಅನ್ಯೋನ್ಯತೆಯಿಂದ ಕೂಡಿದ್ದು ನಿರಂತರವಾಗಿರುತ್ತವೆ. ಜನರು ತಾವು ಮಾಡುವ ಪ್ರತಿಯೊಂದು ಕೆಲಸ ಹಾಗೂ ಚಟುವಟಿಕೆಗಳ ಪರಿಣಾಮಗಳೇನು ಎಂಬುದನ್ನು ಚೆನ್ನಾಗಿ ಅರಿತಿರಬೇಕು. ಜವಾಬ್ದಾರಿ ಮತ್ತು ಸ್ವಾತಂತ್ರ್ಯಗಳೆರಡು ಅತ್ಯಂತ ಹೆಚ್ಚಿನ ನಿಕಟ ಸಂಬಂಧವನ್ನು ಹೊಂದಿವೆ. ಜವಾಬ್ದಾರಿಯಿಲ್ಲದ ಸ್ವಾತಂತ್ರ್ಯ ಅರ್ಥ ರಹಿತವಾದದ್ದು.ಗಾಂಧೀಜಿಯವರ ಪ್ರಕಾರ ಪ್ರತಿಯೊಬ್ಬ ನಾಗರಿಕನು ತನ್ನ ಸರ್ಕಾರದ ಪ್ರತಿಯೊಂದು ಜವಾಬ್ದಾರಿಗಳ ಬಗ್ಗೆಯು ತಿಳಿದಿರಬೇಕು. ಎಲ್ಲಿಯ ತನಕ ಸರ್ಕಾರದ ಚಟುವಟಿಕೆಗಳು ಸಮಂಜಸವಾಗಿರುತ್ತವೆಯೋ ಅಲ್ಲಿಯವರೆಗೂ ಸರ್ಕಾರಕ್ಕೆ ಬೆಂಬಲವನ್ನು ಕೊಡಬೇಕು. ವಿಧೇಯತೆಯನ್ನ ವ್ಯಕ್ತಪಡಿಸಬೇಕು. ಆದರೆ ಯಾವಾಗ ಸರಕಾರದ ವ್ಯಕ್ತಿ ಮತ್ತು ರಾಷ್ಟ್ರಕ್ಕೆ ಹಾನಿಯನ್ನುಂಟು ಮಾಡಿದರೆ ಸರಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ಸು ಪಡೆಯುವುದು ಅವರ ಕರ್ತವ್ಯ ಎuಟಥಿ ೧೯೨೦) ಎಂದು ಹೇಳಿದ್ದಾರೆ. ಗಾಂಧೀಜಿಯವರು ಸತ್ಯಾಗ್ರಹದಿಂದ ಸಾಮಾಜಿಕ ಕ್ರಾಂತಿಯನ್ನ ತಂದರು. ಆಧುನಿಕರ ನೈತಿಕ ಅಧ: ಪತನದಿಂದಲೇ ನಾಗರಿಕತೆಯು ಹಾಳಾಗುತ್ತದೆ ಎಂದರು. ಯುದ್ಧ ತಡೆಯುವ ಅಂತಿಮವಾದ ಉಪಾಯವೆಂದರೆ ಯುದ್ಧ ರಹಿತ ಸಮಾಜ ನಿರ್ಮಾಣ ಆಧ್ಯಾತ್ಮಿಕ ಅಥವಾ ಪಾರಮಾರ್ಥಿಕ ತತ್ವದ ತಳಹದಿಯಿಂದ ಮಾತ್ರ ಶಾಂತ ಸಮಾಜ ಸ್ಥಾಪನೆ ಎಂದರು. ಗಾಂಧೀಜಿಯವರು ವಾಸ್ತವಿಕತೆಯ ಆಧಾರದ ಮೇಲೆ ವ್ಯಕ್ತಿಯನ್ನಾಗಲಿ ವ್ಯಕ್ತಿಯ ಸ್ವಭಾವವನ್ನಾಗಲಿ ರಾಜ್ಯವನ್ನಾಗಲಿ ನೋಡದೇ ಆದರ್ಶದ ಆಧಾರದ ಮೇಲೆಯೇ ಪ್ಲೇಟೊನಂತೆ ನೋಡಿ ಸಿದ್ದಾಂತಗಳನ್ನು ಉಪದೇಶ ರೂಪದಲ್ಲಿ ಕೊಟ್ಟಿದ್ದಾರೆ. ಗಾಂಧೀಜಿ ಮತ್ತು ಪ್ಲೇಟೊ ಇಬ್ಬರು ಇತಿಹಾಸವನ್ನೂ ಆಧ್ಯಾತ್ಮಿಕ ದೃಷ್ಟಿಕೋನದಲ್ಲಿಯೇ ಕಂಡಿದ್ದಾರೆ. ಸ್ವಾತಂತ್ರ್ಯವನ್ನು ಆಂತರಿಕ ಪಾವಿತ್ರದಿಂದ ಮಾತ್ರ ಪಡೆಯಬೇಕೆಂಬುದೇ ಇಬ್ಬರ ವಾದ. ಗಾಂಧೀಜಿ ಮಾನವವತಾವಾದಿಗಳು ಎಲ್ಲ ಜೀವಿಗಳ ಬಗ್ಗೆ ಕಾಳಜಿಯನ್ನೂ ಹೊಂದಿದ್ದರು. ವೈರಿಯನ್ನು ಪ್ರೀತಿಸುವುದು ಎಂಬ ಗುಜರಾತಿ ಗಾದೆಮಾತಿನ ಪ್ರಭಾವ ಅವರ ಮೇಲೆ ಇತ್ತು. ವಿಶ್ವ ಮಾನವರೆಲ್ಲ ಒಂದು. ವಿಶ್ವವೆಲ್ಲ ಒಂದು ಎಂಬ ಅವರ ವೈಚಾರಿಕತೆ ಗ್ರೀನ್ ಮತ್ತು ಬೊಸಂಕ್ಯೂಟ್ (ಃosಚಿಟಿqueಣ) ಅವರನ್ನು ಹೋಲುತ್ತದೆ ಎಂದು ಹೇಳುವರು. “೭೫ನೇ ಸ್ವಾತಂತ್ರ್ಯೋತ್ಸವದ ಆಜಾದ್ ಕಾ ಅಮೃತಮಹೋತ್ಸವ”ದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯ ಕ್ರಮದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಸಂಭ್ರಮದಲ್ಲಿ ಭಾಗವಹಿಸುವ ಮತ್ತು ದೇಶಭಕ್ತಿಯನ್ನು ಆಲಿಸುವ ಉತ್ಸಾಹವನ್ನು ತುಂಬುತ್ತದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹುತಾತ್ಮರನ್ನು ನಾವು ಕೃತಜ್ಞತೆಯಿಂದ ಸ್ಮರಿಸುತ್ತೇವೆ, ಅವರ ತ್ಯಾಗವು ಸ್ವತಂತ್ರ ರಾಷ್ಟ್ರದಲ್ಲಿ ಬದುಕಲು ನಮಗೆ ಸಹಾಯ ಮಾಡಿದೆ. ಸ್ವಾತಂತ್ರ್ಯ ಹೋರಾಟದ ತತ್ವವು ಆಧುನಿಕ ಭಾರತದ ಅಡಿಪಾಯವನ್ನು ರೂಪಿಸುತ್ತದೆ ಮತ್ತು ದೇಶದ ದೂರದೃಷ್ಟಿಯುಳ್ಳ ನಾಯಕರು ಒಂದು ಸಾಮಾನ್ಯ ರಾಷ್ಟ್ರೀಯ ಮನೋಭಾವವನ್ನು ರೂಪಿಸಲು ವಿಶ್ವ ದೃಷ್ಟಿಕೋನಗಳ ವೈವಿಧ್ಯತೆಯನ್ನು ಒಟ್ಟುಗೂಡಿಸಿದ್ದಾರೆ. ಅವರು ಭಾರತ ಮಾತೆಯನ್ನು ದಬ್ಬಾಳಿಕೆ ವಿದೇಶಿ ಅಡಳಿತದಿಂದ ಮುಕ್ತಗೊಳಿಸಲು ಮತ್ತು ಭವಿಷ್ಯವನ್ನು ಸುಭದ್ರಗೊಳಿಸಲು ಬದ್ದರಾಗಿದ್ದರು. ಅವರ ಆಲೋಚನೆಗಳು ಮತ್ತು ಕಾರ್ಯಗಳು ಭಾರತದ ಆಧುನಿಕ ರಾಷ್ಟ್ರದ ಗುರುತನ್ನು ರೂಪಿಸಿವೆ. ಮಹಾತ್ಮ ಗಾಂಧೀಜಿಯವರು ನಮ್ಮ ಸ್ವಾತಂತ್ರ್ಯ ಚಳುವಳಿಯ ಮಾರ್ಗದರ್ಶಕರಾರು ಎಂದು ನಾವು ಅದೃಷ್ಟವಂತರಾಗಿದ್ದೇವೆ. ಒಬ್ಬ ರಾಜಕೀಯ ನಾಯಕನಾಗಿ, ಅವರು ಕೇವಲ ಭಾರತದಲ್ಲಿ ಮಾತ್ರ ಸಂಭವಿಸಬಹುದಾದ ಒಂದು ವಿದ್ಯಮಾನ. ಸಾಮಾಜಿಕ ಕಲಹ, ಆರ್ಥಿಕ ಸಮಸ್ಯೆಗಳು ಮತ್ತು ಹವಾಮಾನ ಬದಲಾವಣೆಯಿಂದ ತೊಂದರೆಗೊಳಗಾದ ಜಗತ್ತು ಗಾಂಧಿಯ ಬೋದನೆಗಳಲ್ಲಿ ಪರಿಹಾರವನ್ನು ಬಯಸುತ್ತಿದೆ. ಸಮಾನತೆ ಮತ್ತು ನ್ಯಾಯಕ್ಕಾಗಿ ಅವರ ಅನ್ವೇಷಣೆ ನಮ್ಮ ಸ್ವಾತಂತ್ರ್ಯ ಮಂತ್ರವಾಗಿದೆ.—————————— ಡಾ. ಎಸ್.ಬಿ. ಬಸೆಟ್ಟಿ ಡಾ.ಎಸ್.ಬಿ.ಬಸೆಟ್ಟಿಯವರು ದಾರವಾಡದ ಕರ್ನಾಟಕ ವಿ.ವಿ.ಯ ಗಾಂಧೀ ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾದ್ಯಾಪಕರಾಗಿದ್ದಾರೆ. ಸಾಹಿತ್ಯ ಶ್ರೀ- ರಾಷ್ಟ್ರ ಮಟ್ಟದ ಪ್ರಶಸ್ತಿ, ವಿದ್ಯಾಭೂಷಣ- ಅಂತರಾಷ್ಟ್ರೀಯ ಮಟ್ಟದು, ಕನಕ ಶ್ರೀ, ಸಮಾಜ ರತ್ನ, ರಾಷ್ಟ್ರ ರತ್ನ ಪ್ರಶಸ್ತಿಗಳಿಂದ ಗೌರವಿಸಲ್ಪಟ್ಟಿದ್ದಾರೆಲೋಕಮಾನ್ಯ ಬಾಲಗಂಗಾದರ ತಿಳಕರ ಸ್ವರಾಜ್ಯ ಕಲ್ಪನೆ,ಲೋಕಮಾನ್ಯ ಬಾಲಗಂಗಾದರ ತಿಳಕರ ದೃಷ್ಠಿಯಲ್ಲಿ ರಾಷ್ಟ್ರೀಯತೆ,ಭಾರತದ ರಾಷ್ಟ್ರದ್ವಜ: ವಿಕಾಸ ಹಾಗು ಸಂಹಿತೆ -ಇವರ ಕೃತಿಗಳು.ಗಾಂಧೀ ಕುರಿತು ೨೦ ಲೇಖನ ಅಂತರಾಷ್ಟ್ರೀಯ, ರಾಷ್ಟ್ರೀಯ ನಿಯತಕಾಲಿಕೆ, ಮಾಸಿಕ ಪತ್ರಿಕೆ ಗಳು ಮತ್ತು ದಿನ ಪತ್ರಿಕೆಯಲ್ಲಿ ಪ್ರಕಟವಾಗಿವೆ.ಸಾಹಿತ್ಯ ಶ್ರೀ- ರಾಷ್ಟ್ರ ಮಟ್ಟದ ಪ್ರಶಸ್ತಿ, ವಿದ್ಯಾಭೂಷಣ- ಅಂತರಾಷ್ಟ್ರೀಯ ಮಟ್ಟದು, ಕನಕ ಶ್ರೀ, ಸಮಾಜ ರತ್ನ, ರಾಷ್ಟ್ರ ರತ್ನ ಪ್ರಶಸ್ತಿಗಳಿಗೆ ಬಾಜನರಾಗಿದ್ದಾರೆ
ಅಂಕಣ ಬರಹ ತೊರೆಯ ಹರಿವು ಆಟಕ್ಕುಂಟು ಲೆಕ್ಕಕ್ಕಿಲ್ಲ ಬಾಲ್ಯದಲ್ಲಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎಂಬ ಮಾತನ್ನು ಸಾಕಷ್ಟು ಬಾರಿ ಕೇಳಿಸಿಕೊಂಡಿರ್ತೀವಿ ಅಥವಾ ಹೇಳಿರ್ತೀವಿ. ಅದರಲ್ಲೂ, ಸಮಾನ ವಯಸ್ಕ ಗೆಳೆಯರೊಡನೆ ಆಡುವಾಗ, ಚಿಕ್ಕವಯಸ್ಸಿನ ಮಕ್ಕಳು ತಮ್ಮನ್ನೂ ಆಟಕ್ಕೆ ಸೇರಿಸಿಕೊಳ್ಳಿರೆಂದು ಹಠ ಹಿಡಿದಾಗಲೋ ಅಥವಾ ಹಿರಿಯರು ಗದರಿಸಿ ಸಣ್ಣಮಕ್ಕಳನ್ನು ಆಟಕ್ಕೆ ಸೇರಿಸಿ ಹೋದಾಗಲೋ ಈ ಮಾತು ಬಳಕೆಯಾಗಿರುತ್ತೆ. ಎಂದರೆ, ಆಟದ ನಿಯಮಗಳು ಅರ್ಥವಾಗದ, ಅನುಸರಿಸಲಾಗದ ವಯಸ್ಸು ಹಾಗೂ ಮನಃಸ್ಥಿತಿ ಇರುವವರೊಡನೆ ಗುದ್ದಾಡಿಕೊಂಡು ಆಟದ ಮಜಾ ಹಾಳು ಮಾಡಿಕೊಳ್ಳಲಾರದೆ ,ಅವರೂ ಇದ್ದರೆ ಇರಲಿ ಅವರ ಪಾಡಿಗೆ; ನಾವೂ ಆಡಿಕೊಳ್ಳೋಣ ನಮ್ಮ ಪಾಡಿಗೆ ಎಂಬರ್ಥದಲ್ಲಿ ಈ ಮಾತು ಬಳಕೆ ಆಗಿರುತ್ತದೆ. ಇಲ್ಲಿ ಸಣ್ಣಮಕ್ಕಳಿಗೆ ದೊಡ್ಡವರ ಗುಂಪಿನಲ್ಲಿ ತಾವೂ ಆಡಿದೆವೆಂಬ ಖುಷಿ ಸಿಕ್ಕರೆ, ದೊಡ್ಡವರಿಗೆ ತಮ್ಮ ಆಟದ ನಿಯಮಗಳಿಗೆ ಮಕ್ಕಳಿಂದ ತೊಂದರೆ ಆಗಲಿಲ್ಲ ಎಂಬ ಸಮಾಧಾನ! ಈ ಖುಷಿ – ಸಮಾಧಾನ ಸ್ಥಾಯಿಯಲ್ಲ. ಯಾರನ್ನು ಆಟಕ್ಕುಂಟು ಲೆಕ್ಕಕ್ಕಿಲ್ ಲವೆಂದು ಪರಿಗಣಿಸಿ ಹಾಗೆ ನಡೆಸಿಕೊಳ್ಳಲಾಗಿರುತ್ತದೆಯೋ ಅವರಿಗೆ ಸ್ವಲ್ಪ ತಿಳುವಳಿಕೆ ಮೂಡುತ್ತಿದ್ದಂತೆಯೇ, ತನ್ನನ್ನು ಗುಂಪಿನಿಂದ ಪ್ರತ್ಯೇಕಿಸಲಾಗಿದೆ ಎನ್ನುವುದು ಅರ್ಥ ಆಗುತ್ತದೆ. ಆಗ ಮೊದಲಿಗೆ ಅವರ ಮನಸ್ಸಿಗೆ ಘಾಸಿಯಾಗುತ್ತದೆ! ಅನಂತರ ದುಃಖ ಮೂಡಿ; ಕೊನೆಗೆ ಅದು ಸಿಟ್ಟು, ಕೋಪಕ್ಕೆ ಮೂಲವಾಗಿ ದ್ವೇಷ-ರೋಷದ ಕಿಡಿ ಹೊತ್ತಿಸಿ ಇತರರೊಡನೆ ಜಗಳವಾಡಿಕೊಂಡು, ದೂರು ಹೇಳಿ, ಗಲಾಟೆ ಎಬ್ಬಿಸಿ ಆಟದ ಆನಂದವನ್ನೇ ಕೆಡಿಸಬಹುದು ಅಥವಾ ಆಟವನ್ನೇ ಮುಕ್ತಾಯಗೊಳಿಸುವ ಕೊನೆಯ ಹಂತಕ್ಕೆ ಮುಟ್ಟಬಹುದು. ಇಂಗ್ಲೀಷಿನಲ್ಲಿ ಒಂದು ಮಾತಿದೆ. ‘ಗುಡ್ ಫಾರ್ ನಥಿಂಗ್’ ಎಂದು. ಇದನ್ನೂ ಸಹ ನಮ್ಮ ‘ಆಟಕ್ಕುಂಟು …’ ಎನ್ನುವ ನುಡಿಗಟ್ಟಿನಂತೆಯೇ ಬಳಸುವುದುಂಟು. ಅಪ್ರಯೋಜಕರಿಗೆ, ನಿಷ್ಪ್ರಯೋಜಕರಿಗೆ ಬೆಟ್ಟು ಮಾಡಿ ತೋರಿಸುವಾಗ ಈ ಮಾತು ಹೇಳಲಾಗುತ್ತದೆ. ಎಂದರೆ ಮನುಷ್ಯ ಒಳ್ಳೆಯವರೇ, ಆದರೆ ಏನೂ ಉಪಯೋಗವಿಲ್ಲ! ಉಪಯೋಗಕ್ಕೆ ಬಾರದ ಒಳ್ಳೆಯತನ ಕಟ್ಟಿಕೊಂಡು ಪ್ರಯೋಜನವೇನು? ಎಂದು ಕೇಳಬಹುದಾದ ಪ್ರಶ್ನೆಗೆ, ಒಳ್ಳೆಯದ್ದೇ ಅಪರೂಪ ಆಗುತ್ತಿರುವ ಈ ಸಂದರ್ಭದಲ್ಲಿ ಕಡೇಪಕ್ಷ ಅಂತಹ ಗುಣವನ್ನು ತೋರುವವರಾದರೂ ಇದ್ದಾರಲ್ಲ ಎಂದು ಸಮಾಧಾನಪಟ್ಟುಕೊಳ್ಳಬೇಕೆನ್ನುವ ಉತ್ತರ ನೀಡಬಹುದೇ? ಆಟ ಎಂದರೆ ಎಷ್ಟೊಂದು ಬಗೆ ನೆನಪಾದರೂ ‘ಬಾಲ್ಯದ ಆಟ ಆ ಹುಡುಗಾಟ ಇನ್ನೂ ಮರೆಯೋಕೆ..’ ಸಾಧ್ಯವೇ ಇರೋಲ್ಲ. ನಮ್ಮ ಬಾಲ್ಯ ಕಾಲದ ಆಟಗಳ ಮುಂದೆ ಈಗಿನ ಮಕ್ಕಳ ಇಂಟರ್ನೆಟ್ಟಿನೊಳಗಿನ ವೀಡಿಯೋ ಗೇಮಾಟಗಳನ್ನು ಹೋಲಿಸಲು ಸಾಧ್ಯವೇ ಇಲ್ಲ. ಮಣ್ಣಿನೊಡನೆ ಆಡಿರೆಂದರೆ ಮೂಗು ಮುರಿದುಕೊಳ್ಳುವ ಈ ಮಕ್ಕಳಿಗೆ ಇಂಡೋರ್ ಗೇಮ್ ಎಂದರೆ ಕೇರಂ, ಚೆಸ್, ಪಗಡೆ, ಅಳಿಗುಣಿ ಮನೆ, ಚೌಕಾಬಾರ, ಹಾವು ಏಣಿ ಮೊದಲಾದವು ನೆನಪಾಗುವುವೇ? ಧರ್ಮರಾಯನೂ ಸಹ ಇಂಡೋರ್ ಗೇಮೆಂಬ ದ್ಯೂತದಲ್ಲಿ ಸೋತವನೇ.. ಸೋತವನು ಅನಂತರ ಗೆದ್ದವನಾದುದೇ ಒಂದು ದೊಡ್ಡ ರಾಮಾಯಣ..! ಅಲ್ಲಲ್ಲ ಮಹಾಭಾರತ. ‘ದೇವರ ಆಟಾ ಬಲ್ಲವರಾರು…?’ ಎನ್ನುತ್ತಾ ‘ಎಲ್ಲಾ ವಿಧಿಯ ಲೀಲೆ ನರಮಾನವನ ಕೈಯಲ್ಲಿ ಏನಿದೆ?’ ಎಂದು ಯಾವ ಜವಾಬ್ದಾರಿಯನ್ನೂ ಹೊರಲಾರದವರು ಹೇಳಿ ಕೈ ತೊಳೆದುಕೊಂಡು ಬಿಡುವುದುಂಟು. ಇದು ಯುದ್ಧಕ್ಕೆ ಮೊದಲೇ ಶಸ್ತ್ರತ್ಯಾಗ ಮಾಡಿದಂತೆ. ಯುದ್ಧ ಎಂದಾಗ ನೆನಪಾಗುವುದು ನೋಡಿ, ಹೊಡಿಬಡಿಕಡಿ,ಹುಡುಕಿ ಕೊಚ್ಚು, ಅಟ್ಟಾಡಿಸಿ ಕೊಲ್ಲು, ಬಾಂಬ್ ಹಾಕು, ಬಂದೂಕಿನಿಂದ ಗುರಿಹಿಡಿ, ಎದೆ ಸೀಳು, ರಕ್ತ ಬಸಿ ಎನ್ನುವಂತಹ ವೀಡಿಯೋ ಗೇಮ್ ಗಳನ್ನು ಈಗತಾನೇ, ತಾಯ ಮೊಲೆಹಾಲು ಕುಡಿದು ಬಿಟ್ಟ ತುಟಿಗಳಲ್ಲಿ ಹಸಿಹಾಲಿನ ವಾಸನೆ ಆರಿರದ ಕಂದಮ್ಮಗಳು ಆಡುತ್ತಿರುವುದು ಭೀಭತ್ಸಕ್ಕೆ ನೈಜ ಉದಾಹರಣೆ. ಹೀಗೆ ಆಡುವುದೇ ಮಜಾ ಎಂಬಂತೆ, ಬ್ರೈನ್ ವಾಷ್ಗೆ ಒಳಗಾಗುವ ಮಕ್ಕಳ ಕೈಯಲ್ಲಿ ಎಕೆ-೪೭ ರಂತಹ ರಣಮಾರಿಯ ಕೈಯ ಆಯುಧ ಸಿಕ್ಕರೆ ತಮ್ಮ ಖುಷಿಗಾಗಿ ಅನ್ಯ ಸಹಜೀವಿಯನ್ನು ಕೊಂದು ತೀರದಿರರೇ? ‘…ಆಟ ಊಟ ಓಟ ಕನ್ನಡ ಮೊದಲನೆ ಪಾಠ..’ ಎಂದು ಚಿಕ್ಕಂದಿನಲ್ಲೇ ಕಲಿಯುತ್ತಾ ಬೆಳೆದ ನಾವು ದೊಡ್ಡವರಾದ ಮೇಲೆ ಹೇಳ್ತೀವಿ, ‘ನಿನ್ನಾಟ ನನ್ಹತ್ರ ನಡೀಯಲ್ಲಮ್ಮಾ..’ ಎಂದು. ಆದ್ರೆ ಕೃಷ್ಣನಾಟಕ್ಕೆ ಮಾತ್ರ ಸುಮ್ಮನೆ ಮಾತಿಗೆಂಬಂತೆ, ‘ಬೇಡ ಕೃಷ್ಣಾ ರಂಗಿನಾಟ..’ ಎಂದು ಹುಸಿ ಮುನಿಸು ತೋರಿದರೂ ಒಳಗೊಳಗೆ ಪುಳಕಗೊಂಡು ಸಂಭ್ರಮಿಸ್ತೀವಿ! ಕೃಷ್ಣ ಬರಿಯ ರಂಗಿನಾಟಗಳನ್ನು ಮಾತ್ರ ಆಡಿದವನಲ್ಲ, ರಾಜತಾಂತ್ರಿಕ ನೈಪುಣ್ಯ ಸಾಧಿಸಿದವನು ಎಂದೆಲ್ಲಾ ಕೊಂಡಾಟ ಮಾಡಿದರೂ ನಮಗೆ ಇಷ್ಟವಾಗಿ ಮನಸ್ಸಿಗೆ ಹತ್ತಿರವಾಗೋದು ಗೋಪಬಾಲನ ಬಾಲ್ಯದ ಆಟಗಳ ಸೊಗಸುಗಾರಿಕೆಗಳೇ.. ಒಂದೊಂದು ಪ್ರದೇಶಕ್ಕೂ ವಿಶಿಷ್ಟವಾದ ಸ್ಥಳೀಯ ಆಟಗಳಿರುತ್ತವೆ. ಭಾರತ-ಹಾಕಿ, ಅಮೇರಿಕ- ರಗ್ಬಿ, ಸ್ಪೇನ್- ಗೂಳಿ ಕಾಳಗ, ಆಸ್ಟ್ರೇಲಿಯಾ- ಕ್ರಿಕೆಟ್, ಬಾಂಗ್ಲಾದೇಶ- ಕಬಡ್ಡಿ, ಚೀನಾ – ಪಿಂಗ್ ಪಾಂಗ್, ಜಪಾನ್- ಸುಮೋ, ಭೂತಾನ್-ಆರ್ಚರಿ…. ಹೀಗೆ ಹಲವು ರಾಷ್ಟ್ರಗಳು ತಮ್ಮ ರಾಷ್ರೀಯ ಕ್ರೀಡೆಗಳನ್ನು ಇವೇ ಎಂದು ಘೋಷಿಸಿಕೊಂಡಿವೆ. ಇದರ ಜೊತೆಗೇ, ಭಾರತದಂತಹ ಸಂಯುಕ್ತ ಒಕ್ಕೂಟ ರಾಷ್ಟ್ರದಲ್ಲಿ ಕಬಡ್ಡಿ, ಕಂಬಳ, ಜಲ್ಲಿಕಟ್ಟು, ಎತ್ತಿನಗಾಡಿ ಸ್ಪರ್ಧೆ, ದೋಣಿ ಸ್ಪರ್ಧೆ, ಮರ ಏರುವುದು, ಬುಗುರಿ, ಚಿನ್ನಿದಾಂಡು, ಅಪ್ಪಾಳೆ ತಿಪ್ಪಾಳೆ, ಮುದ್ದೆ ನುಂಗುವುದು, ಗದ್ದೆ ನಾಟಿ ಮಾಡುವುದು…, ಹೀಗೆ ಹಲವು ಪ್ರಾದೇಶಿಕ ಆಟಗಳನ್ನು ಹಾಗೂ ಕೆಲವು ಸೀಸನಲ್ ಆಟಗಳನ್ನೂ ಆಡುವುದುಂಟು. ಆಟವನ್ನು ಆಟ ಎಂದರೆ, ಏನೋ ಲಘುತ್ವ ಭಾವ. ಹಾಗಾಗಿ, ಕ್ರೀಡೆ ಎಂದು ಕರೆದು ಅದಕ್ಕೆ ಗಾಂಭೀರ್ಯವನ್ನು ಆರೋಪಿಸಲಾಗುತ್ತದೆ. ಹೌದಲ್ಲವೇ? ಆಡುವಾಗ ಗಂಭೀರವಾಗಿಲ್ಲದಿದ್ದರೆ, ಏಕಾಗ್ರತೆ ಕಳೆದುಕೊಂಡು ಬಹುಮಾನ ವಂಚಿತರಾಗಬಹುದು. ಸ್ಥಳೀಯ ಕ್ರೀಡೆಗಳು ಮನೆಯ ಒಳಾಂಗಣದಿಂದ ಪ್ರಾರಂಭವಾಗಿ, ಅಂಗಳ ಮುಟ್ಟಿ, ಬಯಲಿಗೆ ಸಾರಿರುವುದು ಮಾನವನ ನಾಗರಿಕತೆಯ ವಿಕಾಸವಾದದಷ್ಟೇ ಇತಿಹಾಸ ಉಳ್ಳದ್ದು. ಶಾಲೆ- ಕಾಲೇಜು ಹಂತಗಳಲ್ಲಿ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದವರಿಗೆ ಉನ್ನತ ವ್ಯಾಸಂಗಕ್ಕೆ ವಿಫುಲ ಮೀಸಲಾತಿಯ ಅವಕಾಶಗಳನ್ನು ಸರ್ಕಾರ ಮಾಡಿಕೊಡುತ್ತದೆ. ಕೇವಲ ವಿದ್ಯಾಭ್ಯಾಸವಷ್ಟೇ ಅಲ್ಲ, ಸರ್ಕಾರಿ ಉದ್ಯೋಗದಲ್ಲೂ ಗೌರವ ಸ್ಥಾನಮಾನಗಳನ್ನು ಕಲ್ಪಿಸಲಾಗುತ್ತದೆ. ಕ್ರೀಡಾ ಸಾಧಕರದ್ದು ವೈಯಕ್ತಿಕ ಸಾಧನೆ, ಅವರಿಗೇಕೆ ಈ ಬಗೆಯ ವಿಶೇಷ ಗೌರವ ಎನ್ನುವವರಿಗೆ, ತಿಳಿ ಹೇಳಬೇಕಾದುದು ಜವಾಬ್ದಾರಿ ಹೊಂದಿರುವ ನಾಗರಿಕರ ಕರ್ತವ್ಯ. ಕೆಲವೊಮ್ಮೆ ಆಟಗಳನ್ನು ಸಾಂಪ್ರದಾಯಿಕ ಎಂದೋ ಹ್ಂದಿನಿಂದ ನಡೆದು ಬಂದ ರೂಢಿ- ಪರಂಪರೆ ಎಂದೋ ಆಡುವುದು ಕಡ್ಡಾಯ. ಕೃಷ್ಣ ಜನ್ಮಾಷ್ಠಮಿಗೆ ಮೊಸರಿನ ಗಡಿಗೆ ಒಡೆಯುವುದು, ಗಾಳಿಪಟ ಬಿಡುವುದು, ಎತ್ತಿನ ಬಂಡಿ ಓಡಿಸುವುದು, ಭಾರದ ಗುಂಡು ಎತ್ತುವುದು, ದಸರಾ ಹಬ್ಬದಲ್ಲಿ ಪೈಲ್ವಾನ್ಗಳಿಂದ ಕುಸ್ತಿ ಕಾಳಗ, ಹುಂಜದ ಅಂಕಣ, ಕೋಳಿ ಜಗಳ, ಹೋರಿ- ಟಗರು ಕಾಳಗ, ಯುಗಾದಿ ಹಬ್ಬದ ಮಾರನೆ ದಿನ ಇಸ್ಪೀಟಾಟ…. ಇವೆಲ್ಲಾ ಒಂದು ಪುರಾಣದ್ದೋ ಇತಿಹಾಸದ್ದೋ ಎಳೆಯನ್ನು ಇಟ್ಟುಕೊಂಡು ನಾಮಕಾವಾಸ್ತೆಗೆ ಇರಲಿ ಎಂದಾದರೂ ಆಡುವಂತಿರುತ್ತವೆ!! ಕ್ರೀಡೆ ಎಂದರೆ ಕೇವಲ ದೈಹಿಕ ಆಟವಲ್ಲ. ಅದು ಮಾನಸ್ಥಿಕ ಸ್ಥಿತಿಯೂ ಕೂಡ. ‘ಕ್ರೀಡಾ ಮನೋಭಾವ’ ಹೊಂದಿರಬೇಕೆಂದರೆ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವುದು ಎಂದರ್ಥ. ಸೋತ ಕಾರಣಕ್ಕೆ ಹತಾಶರಾಗಿ ಕೈ ಚೆಲ್ಲದೇ, ಮರಳಿ ಯತ್ನವ ಮಾಡುತ್ತಿರಬೇಕೆನ್ನುವ ಸಂಕಲ್ಪ ಶಕ್ತಿಯನ್ನು ಸದಾಕಾಲ ಜಾಗೃತವಾಗಿ ಇಟ್ಟುಕೊಳ್ಳುವುದೇ ಕ್ರೀಡಾ ಮನೋಭಾವ. ಇದು ವೈಯಕ್ತಿಕ ಸ್ವಾಸ್ಥ್ಯದೊಡನೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೂ ಸಹಕಾರಿಯಾಗುತ್ತದೆ. ಒಲಂಪಿಕ್ಸ್, ಕಾಮನ್ವೆಲ್ತ್, ಫಿಫಾ, ಟೆನ್ನಿಸ್ ನ ವಿವಿಧ ಗ್ಯ್ರಾಂಡ್ ಸ್ಲ್ಯಾಮ್ ಗಳು, ಚೆಸ್, ಕ್ರಿಕೆಟ್, ರಗ್ಬಿ, ಕುದುರೆ ಸವಾರಿ, ಅಥ್ಲೆಟಿಕ್ಸ್ ನ ರಾಷ್ಟ್ರೀಯ- ಅಂತಾರಾಷ್ಟ್ರೀಯ ಕ್ರೀಡೆಗಳು ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುತ್ತವೆ. ಯಾವುದೋ ದೇಶದ ಕ್ರೀಡಾ ತಾರೆ, ಮತ್ಯಾವುದೋ ದೇಶದ ಗಾಡ್ ಆಫ್ ಅರ್ಥ್ ಆಗುವುದೇ ಒಂದು ಸೋಜಿಗ. ಇದು ಕೆಲವೊಮ್ಮೆ ಅತಿರೇಕಕ್ಕೆ ಹೋಗಿ ಹುಚ್ಚುತನ ಎನಿಸುತ್ತದೆ. ಕೆಲವೊಂದು ಕ್ರೀಡೆಗಳು ಸಮುದಾಯವನ್ನೇ ಸಮೂಹ ಸನ್ನಿಗೆ ಒಳಪಡಿಸುತ್ತವೆ. ಕ್ರೀಡೆಗಳನ್ನು ಅನುಸರಿಸಿ ಬರುವ ಪ್ರಾಯೋಜಕರು, ಜಾಹೀರಾತುಗಳು ಕೋಟ್ಯಾಂತರ ರೂಪಾಯಿಯ ವ್ಯವಹಾರ ನಡೆಸುತ್ತವೆ. ವೇಶ್ಯಾವಾಟಿಕೆಗೆ, ಡ್ರಗ್ಸ್ ದಂಧೆಗೆ, ಮಾನವ ಸಾಗಾಣಿಕೆ, ರಾಜಕೀಯ ಸ್ಥಿತ್ಯಂತರಕ್ಕೆ, ಆಟಗಳೂ ಪ್ರಮುಖ ಕಾರಣ ಎನ್ನುವುದನ್ನು ಅರಗಿಸಿಕೊಳ್ಳುವುದು ಕಷ್ಟವೇ… ಸರಿಯಾದ ತರಬೇತಿ, ಅನುಕೂಲಕರ ವ್ಯವಸ್ಥೆ ಒದಗಿಸಿದರೆ ಗ್ರಾಮೀಣ ಪ್ರತಿಭೆಗಳು ಸಾಧನೆ ಯಾವ ಎತ್ತರದಲ್ಲಿರುತ್ತದೆ ಎಂಬುದಕ್ಕೆ ನಮ್ಮ ಮುಂದೆ ಉದಾಹರಣೆಯ ಸಾಲು ಸಾಲು ಮಾದರಿಗಳೇ ಇವೆ. ಆದರೆ, ಲಿಂಗ-ಜಾತಿ- ವರ್ಗ- ವರ್ಣ ತಾರತಮ್ಯಗಳು ಅಂಥ ಸಾವಿರಾರು ಪ್ರತಿಭೆಗಳನ್ನು ಅವಕಾಶವಂಚಿತರನ್ನು ಸೃಷ್ಟಿಸಿರುವುದು ಉಂಟು. ವಶೀಲಿಭಾಜಿ ನಡೆಸಿ, ಕ್ರಿಕೆಟ್, ಅದರಲ್ಲೂ ಪುರುಷರ ಕ್ರಿಕೆಟ್ ಒಂದೇ ನಿಜವಾದ ಆಟವೆಂದು ಪರಿಗಣಿಸುವ ಭಾರತದಂಥ ದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಎರಡಂಕಿ ಮೇಲೆ ಪದಕ ನಿರೀಕ್ಷಿಸುವುದು ಮೂರ್ಖತನ. ನಾವು ಎಂಜಿನಿಯರ್, ವೈದ್ಯಕೀಯ ಬಿಟ್ಟ ಓದು ಓದಲ್ಲ ಎಂದೂ, ಕ್ರಿಕೆಟ್ ಬಿಟ್ಟ ಇತರೆ ಆಟ ಆಟವಲ್ಲ ಎಂದೂ ಎಂದೋ ಪರಮ ದಡ್ಡತನದ ನಿರ್ಧಾರ ಮಾಡಿಬಿಟ್ಟಿರುವಂತಿದೆ. ಶಾಲಾ ಹಂತದಲ್ಲಿ ದೈಹಿಕ ಚಟುವಟಿಕೆಗಳಿಗೂ ಮಹತ್ವ ನೀಡುತ್ತಿದ್ದ ಶಿಕ್ಷಣ ವ್ಯವಸ್ಥೆ ಬರಬರುತ್ತಾ, ಓದಿನ ಕಾರ್ಖಾನಗಳಂತೆ ಆಗುತಿರುವುದು ದೈಹಿಕ – ಮಾನಸಿಕ ಹಾಗೂ ಆ ಮೂಲಕ ಸಾಮಾಜಿಕ ಸ್ವಾಸ್ಥ್ಯದ ಹದವನ್ನು ಹಾಳುಗೆಡವುತ್ತಿದೆ. ಬೆಕ್ಕಿನ ಕೈಗೆ ಸಿಕ್ಕಿ ಬೀಳುವ ಇಲಿಯನ್ನು ಅದು ಒಂದೇ ಏಟಿಗೆ ಕೊಂದು-ತಿಂದು ಮುಗಿಸುವುದಿಲ್ಲ. ಬಿಟ್ಟ ಹಾಗೆ ಮಾಡಿ, ಮತ್ತೆ ಮೇಲೆ ಹಾರಿ ಅದನ್ನು ಸತಾಯಿಸಿ ಸುಸ್ತು ಮಾಡಿಸಿ ಅದು ಗಾಬರಿ ಬಿದ್ದು ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ಮುಟ್ಟಿರುತ್ತದೆ. ಹೀಗೆ, ಒಬ್ಬರ ಆಟ ಮತ್ತೊಬ್ಬರಿಗೆ ಪ್ರಾಣ ಕಂಟಕ ಆಗಬಾರದು ಎಂದೇ ‘ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ’ ಎಂಬ ಗಾದೆ ಟಂಕಿಸಲಾಗಿದೆ. ‘ಆಟ ಆಡಿದ್ರೆ ಅರಗಿಣಿ; ಕಾಟ ಕೊಟ್ರೆ ನಾಗಪ್ಪ’ ಅಂತಾನೂ ಮನೋಆಟದ ಕುರಿತ ಗಾದೆ ಇದೆ. ಇದು ಮಾನವರ ನಡವಳಿಕೆಯು ಹೇಗೆ ಪ್ರಾಣಿಗಳ ನಡವಳಿಕೆಗೆ ಹೋಲಿಕೆಯಾಗುವುದು ಎಂಬ ಬಗ್ಗೆ ಇರುವಂತಹದ್ದು. ಹಿಂದಿನ ರಾಜಮಹಾರಾಜರು, ಹಣವಂತರು ಶಿಕಾರಿಯನ್ನೂ ಆಟವೆಂದೇ ಭಾವಿಸಿದ್ದರೆನ್ನುವುದು ಓದಿನಿಂದ ತಿಳಿಯಬಹುದು. ಈಗ ಕಾನೂನು ಶಿಕಾರಿಯನ್ನು ಅಮಾನ್ಯ ಮಾಡಿದೆ. ಸರ್ಕಸ್ ನಲ್ಲಿ ಹಿಡಿದು ಪಳಗಿಸಿದ ಕಾಡುಪ್ರಾಣಿಗಳಿಂದ ಕೆಲವಾರು ಆಟ ಆಡಿಸಿ ಕಾಸು ಮಾಡುವುದು ಈ ಮನುಷ್ಯ ಜಾತಿಯವರ ಆಸೆಬುರಕತನವೋ ಅಥವಾ ಚಾಣಾಕ್ಷತನವೋ ನಿರ್ಧರಿಸುವುದು ಹೇಗೆ? ‘ಪರಮಾತ್ಮ ಆಡಿಸಿದಂತೆ ಆಡುವೆ ನಾನು’ ಎನ್ನುವ ಆಸ್ತಿಕವಾದಿಗಳು, ತಮ್ಮ ನಿರ್ಧಾರಗಳಿಗೂ ಬೇರೆಯ ಧಾತುವನ್ನು ಹೊಣೆಗಾರಿಕೆ ಮಾಡುವುದು ಬೇಜವಾಬ್ದಾರಿತನ ಅವಲ್ಲದೆ ಮತ್ತೇನಲ್ಲ ಎಂದು ಖಂಡಿತವಾಗಿ ಹೇಳಬಹುದು. ಒಟ್ನಲ್ಲಿ ‘ಆಟ ಕೆಟ್ಟರೆ ದೀವಟಿಗೆಯವನ ಸುತ್ತ’ ಎಂದಂತೆ, ಜೀವನದ ಆಟದಲ್ಲಿ ಭಾಗವಹಿಸಿರುವ ಎಲ್ಲರೂ ಒಂದಲ್ಲಾ ಒಂದು ಪಾತ್ರ ನಿರ್ವಹಿಸವೇ ಬೇಕು. ಹಾಗೂ ‘…. ನಿಂತಾಗ ಬುಗುರಿಯ ಆಟ ಎಲ್ಲಾರೂ ಒಂದೇ ಓಟ…’ ಎಂದು ಆಟ ಮುಗಿಸಿ ‘ಸಾಯೋ ಆಟ’ ಆಡಲು ಗಂಟುಮೂಟೆ ಕಟ್ಟಲೇಬೇಕು… ******************** – ವಸುಂಧರಾ ಕದಲೂರು. ೨೦೦೪ ರ ಬ್ಯಾಚಿನ ಕೆ. ಎ. ಎಸ್. ಅಧಿಕಾರಿಯಾಗಿ ಆಯ್ಕೆಯಾಗಿ, ಕೃಷಿ ಮಾರಾಟ ಇಲಾಖೆಯಲ್ಲಿ ಸಹಾಯಕ ಹಾಗೂ ಉಪ ನಿರ್ದೇಶಕರು ಆಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಪ್ರವಾಸೋದ್ಯಮ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಆಡಳಿತ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆಓದು ಬರವಣಿಗೆ ಪರಮಾಪ್ತ ಹವ್ಯಾಸಗಳು. ೧. ‘ಮರೆತು ಬಿಟ್ಟದ್ದು’ ಮೊದಲ ಕವನ ಸಂಕಲನ.೨. ‘ ಕನ್ನಡ ಕವಿಕಾವ್ಯ ಕುಸುಮ-೪೦’ ಸರಣಿಯಲ್ಲಿ ಹಿರಿಯ ಕವಿಗಳೊಡನೆ ನನ್ನ ಹೆಲವು ಕವನಗಳು ಪ್ರಕಟವಾಗಿವೆ. ಕಥಾ ಸಂಕಲನ ಹಾಗೂ ಕವನ ಸಂಕಲನ ಹೊರತರುವ ಪ್ರಯತ್ನದಲ್ಲಿದ್ದಾರೆ
ವಿ.ಜೇ. ನಾಯಕ ಅವರ ತರುವಾಯ ಜಿಲ್ಲಾ ಘಟಕದ ಅಧ್ಯಕ್ಷಗಾದಿಯೇರಿದ ಟಿ.ಕೇ.ಮಹಮೂದ ಎಂಬ ಹಿರಿಯರು ಇಪ್ಪತ್ತೊಂದು ವರ್ಷಗಳ ಕಾಲ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿಯೂ ಜಿಲ್ಲಾಧ್ಯಕ್ಷರಾಗಲೀ, ತಾಲೂಕು ಘಟಕದ ಅಧ್ಯಕ್ಷರಾಗಿದ್ದ ಹಿರಿಯರಾಗಲೀ, ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನ ನಡೆಸುವುದಾಗಲೀ, ಘಟಕವನ್ನು ಕ್ರಿಯಾಶೀಲ ಚಟುವಟಿಕೆಗಳಿಂದ ಮುನ್ನಡೆಸುವುದು ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ.
ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿದೆ
ಅಂಕಣ ಬರಹ
‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ.
ಸಾಧಕಿಯರ ಯಶೋಗಾಥೆ
ರಾಕ್ಷಸ ಸಂಹಾರಕ್ಕೆ ವೀರರಾದ ಬಾಲಕರನ್ನು ಕಳಿಸಿಕೊಡೆಂದು ಕೇಳಿದಾಗ ದಶರಥ ಮಹಾರಾಜ ಹೌಹಾರಿದ್ದನೆಂದೇ ರಾಮಾಯಣ ಹೇಳುತ್ತದೆ. ‘ಮಕ್ಕಳಿನ್ನೂ ಹಾಲುಗಲ್ಲದ ಹಸುಗೂಸುಗಳು, ನಾನೇ ಬರುವೆ, ಸೈನ್ಯ ತರುವೆ..‘ ಎಂದು ಚಡಪಡಿಸಿ ಬಡಬಡಾಯಿಸಿದ್ದ ಎಂದು ತಿಳಿದಾಗ, ಎಂಥಾ ರಾಜಾಧಿರಾಜ ಆದರೂ ಅಪ್ಪನೆಂಬ ಅಂತಃಕರಣ ಮೀರಲಾದೀತೇ ಎನಿಸುತ್ತದೆ.



