ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

ಆಚರಣೆಗಳಲ್ಲಿನ ತಾರತಮ್ಯ

ವಿಚಾರ ಜ್ಯೋತಿ ಡಿ.ಬೊಮ್ಮಾ ದೇವರನ್ನು ನಂಬಿ ಕೆಟ್ಟವರಿಲ್ಲ ಎಂಬ ವಾದವನ್ನು ಒಪ್ಪಬಹುದು.ಆದರೆ ದೈವದ ಹೆಸರಲ್ಲಿ ಆಚರಿಸುವ ಆಚರಣೆಗಳಲ್ಲಿನ ತಾರತಮ್ಯ ಒಪ್ಪಲಾಗದು. ಪೂಜೆಯ ಆಚರಣೆಗಳು ನಮ್ಮ ಮನಸ್ಸಿಗೆ ಸಮಾಧಾನವಾಗಿದ್ದರಷ್ಷೆ ಸಾಲದು ,ಆ ಆಚರಣೆಗಳು ಮತ್ತೊಬ್ಬರ ಮನಸ್ಸಿಗೆ ನೊವನ್ನುಂಟು ಮಾಡಬಾರದು. ನಿರಾಕಾರನನ್ನು ಒಂದೊಂದು ರೂಪ ಕೊಟ್ಟು ಬಟ್ಟೆ ತೊಡಿಸಿ ಅಲಂಕರಿಸಿ ಒಂದೊಂದು ಹೆಸರು ಕೊಟ್ಟು ಪೂಜಿಸುವರಿಗೆ , ದೇವರನ್ನು ತಾವೆ ಸೃಷ್ಟಿಸುತ್ತಿದ್ದೆವೆ ಎಂಬ ಅರಿವಾಗದೆ..! ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಕ  ,ಈಗ ಬರುತ್ತಿರುವ ವರಮಹಾಲಕ್ಷಿ ಹಬ್ಬವೂ ಅದಕ್ಕೊಂದು ಉದಾಹರಣೆ.ಲಕ್ಷ್ಮಿ ಎಂದರೆ ಅಡಂಬರದ ಪ್ರತಿಕ , ಭಾರಿ ಸೀರೆ ಉಡಿಸಿ ಒಡವೆ ವಸ್ತ್ರ ಗಳ ಧಾರಣೆ ಮಾಡಿ , ಹೂವಿನ ಮಂಟಪದಲ್ಲಿವಿರಾಜಮಾನಳಾಗಿಸಿ ,ಸುತ್ತಲೂ ದೀಪಗಳ ಅಲಂಕಾರ  ,ತಹರೆವಾರಿ ಅಡುಗೆಗಳ ನೈವೇದ್ಯ ,ವೆರೈಟಿ ತಿಂಡಿಗಳನ್ನು ಮೂರ್ತಿಯ ಮುಂದಿಟ್ಟು ತೃಪ್ತಿ ಪಡಿಸಿ (ಬೇರೆಯವರಿಗೂ ಕರೆದು ತೋರಿಸಿ ) ಅಥವಾ ಪಟ್ಟುಕೊಂಡು ಪೂಜೆಯ ಕಾರ್ಯ ಕೈಗೊಳ್ಳುತ್ತಾರೆ. ಆದರೆ ಅರಸಿನ ಕುಂಕುಮಕ್ಕೆ ಕೇವಲ ಮುತೈದೆಯರನ್ನೂ ಮಾತ್ರ ಕರೆಯಬೇಕು ಎನ್ನುವ ನಿಯಮ ಎಷ್ಟು ಸಮಂಜಸ..,! ಕೇವಲ ಗಂಡನ ಇರುವಿಕೆಯಿಂದಲೆ ಅವಳ ಮೌಲ್ಯ ಅರಿಯುವ ಈ ಸಮಾಜದಲ್ಲಿ  ಹೆಣ್ಣಿಗೆ ತನ್ನದೆಯಾದ ಸ್ವಂತ ಅಸ್ತಿತ್ವ ವೆ ಇಲ್ಲವೆ. ಮದುವೆಯಾದ ಮೇಲೆ ಅವಳು ಗಂಡನಿಂದ ಮುತೈದೆ ಪಟ್ಟ ಪಡೆದುಕೊಳ್ಳುತ್ತಾಳೆ .ಅವನು ಅಳಿದ ಮೇಲೆ ಆ ಪಟ್ಟ ಅವಳಿಂದ ಕಿತ್ತುಕೊಳ್ಳಲ್ಪಡುತ್ತದೆ.ಸಮಾಜವು ಕೂಡ ಅವಳು ಮುತೈದೆಯಾಗಿದ್ದರೆ ಮಾತ್ರ ಅವಳಿಗೆ ಶುಭ ಕಾರ್ಯ ಗಳಲ್ಲಿ ಪ್ರಾಮುಖ್ಯತೆ. ಎಷ್ಟೋ ಮಠಗಳಲ್ಲಿ ಮುತೈದೆಯರ ಕುಂಭಮೇಳ ಮತ್ತು ಮುತೈದೆಯರ ಉಡಿತುಂಬುವ ಕಾರ್ಯ ಕ್ರಮ ಆಯೋಜಿಸುತ್ತವೆ ,ಇಂತಹ ಆಚರಣೆಗಳ ಉದ್ದೇಶ ವೇನು..? ಸಮಾಜದಲ್ಲಿನ ಮೌಡ್ಯಗಳನ್ನು ತೊಲಗಿಸುವ ಪ್ರಯತ್ನ ಮಾಡಬೇಕಾದ ಮಠಗಳೆ ಇಂತಹ ಮೌಡ್ಯಕ್ಕೆ ಒತ್ತು ಕೊಟ್ಟರೆ ,ಬೇಲಿಯೆ ಎದ್ದು ಹೋಲ ಮೈದಂತೆ ಅಲ್ಲವೆ..! ಪೂಜೆಯ ಹೆಸರಿನಲ್ಲಿ ಮುತೈದೆಯರನ್ನು ಮಾತ್ರ ಕರೆದು ಅವರಿಗೆ ಉಡಿ ತುಂಬಿ ಭಾರಿ ಭೋಜನ ಉಣಬಡಿಸಿ (ಮುತೈದೆಯರ ಉಟದ ತಯ್ಯಾರಿ ವಿಧವೆಯರು ಮಾಡಬಹುದು ಆದರೆ  ಅವರು ಬಡಿಸುವದು ಮಾತ್ರ ನಿಷಿದ್ದ ) ತಮ್ಮ ಮುತೈದೆತನ ಧೀರ್ಘ ವಾಗಲೆಂದು ಬೇಡಿಕೊಳ್ಳುತ್ತಾರೆ ,ಇದೊಂದು ಆಶಾದಾಯಕ ಆಚರಣೆ ಆಗಿರಬಹುದು ಅವರವರ ಭಾವದಲ್ಲಿ.ಆದರೆ ಗಂಡನನ್ನು ಕಳೆದುಕೊಂಡ ಸ್ತ್ರೀಯು ತನ್ನನ್ನು ಇಂತಹ ಆಚರಣೆಗಳಿಂದ ದೂರವಿಟ್ಟಿರುವದನ್ನು ಹೇಗೆ ಸಹಿಸಿಯಾಳು. ಒಂದು ಮೂರ್ತಿಗೆ ಅಲಂಕಾರಮಾಡಿ ನೋಡಿ ಸಂತೋಷ ಪಡುವ ನಾವು , ಜೀವಂತವಾಗಿರುವ ಒಂದು ಜೀವ ಈ ಪೂಜೆಯ ಒಂದು ಭಾಗವಾಗಲಾರದೆ ದೂರದಲ್ಲಿ ನಿಂತು ಮೂಕವಾಗಿ ರೋಧಿಸುವ ತಲ್ಲಣದ ಅರಿವು ನಮಗಾಗದೆ..! ಮುತೈದೆಯರಿಗೆ ಮಾತ್ರ ಪ್ರಾಶಸ್ತ್ಯ ಕೊಟ್ಟು ತನ್ನನ್ನು ಕಡೆಗಾಣಿಸುವದರಿಂದ ಅವಳು ಮಾನಸಿಕವಾಗಿ ಕುಗ್ಗತ್ತಾಳೆ ,ಖಿನ್ನಳಾಗುತ್ತಾಳೆ ,ಅವಳ ಇಂತಹ ಸ್ಥಿತಿಗೆ ಈ ರೀತಿಯ ತಾರತಮ್ಯ ದ ಆಚರಣೆಗಳು ಪರೋಕ್ಷವಾಗಿ ಕಾರಣವಾಗುತ್ತವೆ. ಗಂಡನನ್ನು ಕಳೆದುಕೊಂಡ ಹೆಣ್ಣಿಗೆ ಸ್ಥೈರ್ಯ ತುಂಬಿ ಅವಳಲ್ಲಿ ಜೀವನ್ಮುಖಿ ಹುಮ್ಮಸ್ಸು ತುಂಬುವತ್ತ ನಮ್ಮ ಪ್ರಯತ್ನ ವಾಗಬೇಕು.ಅದು ಬಿಟ್ಟು ವಿಧವೆಯರನ್ನೂ ಕಡೆಗಾಣಿಸಿ ಮುತೈದೆಯರನ್ನೂ ವೈಭವಿಕರಿಸುವದು ಯಾವ ನ್ಯಾಯ..! ಯಾವ ದೇವರು ಈ ತಾರತಮ್ಯ ಸೃಷ್ಟಿಸಿದ್ದು..! ದೇವರೆನಾದರೂ ಮಾತಾಡುವಂತಿದ್ದರೆ ಇಂತಹ ಆಚರಣೆಗಳನ್ನು ಅವನು ಖಂಡಿತ ಖಂಡಿಸುತಿದ್ದನೆನೋ.. ನಡೆಸಿಕೊಂಡು ಬಂದ ಪೂಜೆ ಆಚರಣೆಗಳು ಕೆಲವರ ಬದುಕಿನ ಭಾಗವೆ ಆಗಿರುತ್ತವೆ. ಅವನ್ನು ಅಲ್ಲಗಳೆಯಲು ಅವರ ಮನಸ್ಥಿತಿ ಒಪ್ಪದು.ಆದರೆ ಈಗ ಎಲ್ಲರೂ ವಿದ್ಯಾವಂತರು ,ಹಿಂದಿನಿಂದ ಆಚರಿಸಿಕೊಂಡು ಬಂದ ಸ್ಂಪ್ರದಾಯ ಮುಂದುವರೆಸಿಕೊಂಡು ಹೋಗಬೇಕು ಎಂಬ ನಿಯಮವೇನಾದರು ಇದೆಯೆ…! ಆಚರಣೆಗಳಲ್ಲಿನ ಒಳಿತು ಕೆಡಕುಗಳನ್ನರಿತು ಮತ್ತೊಬ್ಬರ ಮನಸ್ಸಿಗೆ ನೋವಾಗದಂತೆ ,ಅಡಂಬರವಿಲ್ಲದೆ ತೋರಿಕೆಯಿಲ್ಲದೆ ,ಪೂಜೆಮಾಡಬಹುದಲ್ಲವೆ. ನಮ್ಮೊಳಗಿನ ನಿರಾಕಾರನು ಅದೆ ಬಯಸುವನು. ***********************************   .

ಆಚರಣೆಗಳಲ್ಲಿನ ತಾರತಮ್ಯ Read Post »

ಇತರೆ, ಜೀವನ

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ ಪ್ರಜ್ಞಾ ಮತ್ತಿಹಳ್ಳಿ            ತನ್ನೆಲ್ಲ ಎಲೆಗಳನ್ನುದುರಿಸಿಕೊಂಡು ಒಣಗಿ ನಿಟಾರನೆ ನಿಂತುಕೊಂಡ ಬಿದಿರು ಗಳದಂತಹ ಎಲುಬುಗಳಿಗೆ   ಚರ್ಮ ಸುತ್ತಿ ಇಟ್ಟ ಹಾಗೆ ಭಾಸವಾಗುವ ಅವಳ ಕುತ್ತಿಗೆಯ ನರಗಳು ಹಸಿರು ಕಾಡು ಬಳ್ಳಿಗಳಂತೆ ಉಬ್ಬುಬ್ಬಿ ಗಂಟಲು ಹರಿದು ಹೊರಬಂದು ಬಿಡುತ್ತವೋ ಎಂಬಂತೆ ಕಾಣುತ್ತಿದ್ದವು. ಹಕ್ಕಿಯೊಂದು ಮೊಟ್ಟೆಯಿಡಲು ಮರದ ಕಾಂಡದಲ್ಲಿ ಹುಡುಕಿಕೊಂಡ ಡೊಗರಿನ ಹಾಗೆ ಎಲುಬುಗಳ ನಡುವೆ ಖಾಲಿ ಜಾಗ ಎದ್ದು ಕಾಣುತ್ತಿತ್ತು.  ಬದುಕಿನ ನಲವತ್ತು ವರ್ಷ ಜೊತೆಗಿದ್ದ ಅಸ್ತಮಾ ಅವಳ ಉಸಿರಾಟದ ರೀತಿಯನ್ನೇ ಬೇರೆ ಮಾಡಿಬಿಟ್ಟಿತ್ತು.  ಸಾದಾ ಉಸಿರು ಎಂದರೂ ಅದಕ್ಕೊಂದು ಸುಂಯ್ ಸುಂಯ್ ಸಪ್ಪಳ ಇರುತ್ತಿತ್ತು. ಹಳೆಯ ಹಾರ್ಮೊನಿಯಂ ಜೋರುಜೋರಾಗಿ ತಿದಿಯೊತ್ತಿದರೆ ಬುಸುಗುಟ್ಟುವ ಹಾಗೆ  ಆ ನಲವತ್ತು ವರ್ಷವೂ ಪ್ರತಿ ಸೆಕೆಂಡೂ ಅವಳು ತನ್ನ ಉಸಿರನ್ನು ಪ್ರಯತ್ನಪೂರ್ವಕವಾಗೇ ತೆಗೆದುಕೊಳ್ಳಬೇಕಿತ್ತು. ಮತ್ತು ಆ ಪ್ರತಿ ಸಲದ ಉಸಿರು ಎಳೆಯುವ ಸದ್ದನ್ನೂ ಅವಳ ಕಿವಿಗಳು ಕೇಳಿಸಿಕೊಂಡಿದ್ದವು. ಅವಳನ್ನು ಮೊದಲ ಬಾರಿಗೆ ನೋಡಿದವರು ಥಟ್ಟನೆ ಈ ವಿಲಕ್ಷಣ ಉಸಿರಾಟದ ಸಪ್ಪಳ ಗಮನಿಸಿ ಅನಾರೋಗ್ಯದ ಕುರಿತು ಕೇಳದೇ ಇರಲು ಸಾಧ್ಯವಾಗದಿರುವಷ್ಟರ ಮಟ್ಟಿಗೆ ಆ ಸದ್ದು ತನ್ನ ಇರುವಿಕೆಯನ್ನು ತೋರುತ್ತಿತ್ತು. ಅವಳು ನಾಕು ಮೆಟ್ಟಿಲು ಹತ್ತಿದಾಗಲಂತೂ ಅವಳ ನಾಕಡಿಯ ಪುಟ್ಟ ದೇಹದ ಪ್ರತಿ ಕಣ ಕಣವೂ ಉಸಿರಿಗಾಗಿ ಹಪಹಪಿಸುತ್ತಿರುವಂತೆ ಅನ್ನಿಸಿದರೆ ಆಳಕ್ಕಿಳಿದ ಕಣ್ಣುಗಳು ನೀರಿಂದ ಹೊರತೆಗೆದ ಮೀನುಗಳಂತೆ ಚಡಪಡಿಸುತ್ತಿದ್ದವು.  ಅವಳ ಪುಪ್ಪುಸದಲ್ಲಿ ಸದಾ ತುಂಬಿರುತ್ತಿದ್ದ ಕಫ ಖಾಲಿಯಾಗದ ಅಕ್ಷಯ ಭಂಡಾರದಂತೆ ಕೂತಿದ್ದು ಧಾವಂತದ ಘಳಿಗೆಗಳಲ್ಲಿ ಕೆಮ್ಮಿನ ಕೊನೆಯಲ್ಲಿ ಹೊರಬರುತ್ತಿತ್ತು. ನಿರಂತರ ಸ್ಟೆರಾಯ್ಡಿನ ಸೇವನೆಯ ಅಡ್ಡ ಪರಿಣಾಮವಾಗಿ ಸೊಟ್ಟ ಸೊಟ್ಟಗೆ ಬಗ್ಗಿ ಹೋದ ಬೆರಳುಗಳು ಅವಳು ಬದುಕಿಡೀ ಉಳಿಸಿಕೊಳ್ಳಲು ಹೆಣಗುತ್ತಿದ್ದ ಬಾಂಧವ್ಯಗಳ ಬೇರಂತೆ ನೇತಾಡುತ್ತಿದ್ದವು. ಅದೇ ಬೆರಳಿಂದಲೇ ದೊಡ್ಡ ದೊಡ್ಡ ತಪ್ಪಲೆಗಳ ಹೊತ್ತು ಓಡಿದಂತೆ ದಾಪುಗಾಲಿಕ್ಕುತ್ತ ಬುಸುಬುಸು ಉಸಿರೆಳೆದುಕೊಳ್ಳುತ್ತಲೇ ಕೂಡೊಲೆಗೆ ಬೆಂಕಿ ಹಾಕುತ್ತ ಸೊಟ್ಟ ಬೆರಳಿಂದಲೇ ಕಡುಬಿನ ಕೊಟ್ಟೆ ಕಟ್ಟಿ ಮೊಮ್ಮಕ್ಕಳು ಮರಿಮಕ್ಕಳಾದಿಯಾಗಿ ಹಿಂಡುಗಟ್ಟಲೆ ಜನರನ್ನು ಅನಾಮತ್ತಾಗಿ ಎಪ್ಪತ್ತು ವರ್ಷ ಸಾಕಿಬಿಟ್ಟಳು ಸೀರೆಯುಟ್ಟುಕೊಂಡು ಬಂದ ಇಣಚಿಯಂತಿದ್ದ ನಮ್ಮಜ್ಜಿ.                 ಅಸ್ತಮಾ ಕಾಟಕ್ಕೆ ಅವಳಿಗೆ ರಾತ್ರಿ ಗಡದ್ದು ನಿದ್ದೆ ಅಂತ ಬರುತ್ತಲೇ ಇರಲಿಲ್ಲ. ಒಂದು ರೀತಿಯ ಮಂಪರಿನಲ್ಲೇ ಇರುತ್ತಿದ್ದಳು. ಯಾವುದಾದರೂ ಸಣ್ಣ ಸಪ್ಪಳವಾದರೂ ಎದ್ದು ಬಿಡುತ್ತಿದ್ದಳು. ಅವಳ ಮಂಚದ ಪಕ್ಕದಲ್ಲಿ ಕಿಡಕಿಯ ಮೇಲೆ ಯಾವಾಗಲು ಒಂದು ಬ್ಯಾಟರಿ, ಅಮ್ರತಾಂಜನದ ಡಬ್ಬಿ, ಬಾಯೊಳಗೆ ಸ್ಪ್ರೇ ಮಾಡಿಕೊಳ್ಳುವ ಅಸ್ತಮಾದ ಔಷಧಿ ಇರುತ್ತಿದ್ದವು. ಹಾಗೆ ನಿದ್ದೆಯಲ್ಲದ ಎಚ್ಚರವಲ್ಲದ ಮಂಪರಿನಲ್ಲಿ ತೆರೆದಿಟ್ಟ ಕಿಡಕಿಯಾಚೆಗಿನ ನಿಶಾ ಜಗತ್ತಿನ ಶಬ್ದಗಳನ್ನು ಆಲಿಸುತ್ತ ತನ್ನ ಉಸಿರಿಗೆ ತಾನೇ ಕಾವಲೆಂಬಂತೆ ಅಷ್ಟೆಲ್ಲ ವರ್ಷ ಬದುಕಿದರೂ ಒಂದೇ ದಿನಕ್ಕೂ ರೋಗ ಕೊಟ್ಟ ವಿಧಿಯನ್ನಾಗಲೀ, ಗುಣ ಮಾಡದ ಔಷಧಿಯನ್ನಾಗಲೀ, ತನ್ನ ಸ್ಥಿತಿಯ ಸಂಕಟವನ್ನಾಗಲೀ ಬೈದಿದ್ದು ಇಲ್ಲವೇ ಇಲ್ಲ. ಇದು ಹೀಗೇ ಇರಬೇಕು ಮತ್ತು ಇದು ಹೀಗಿದ್ದರೇ ಸರಿ ಎನ್ನುವಷ್ಟು ಒಗ್ಗಿಕೊಂಡು ಅದರಲ್ಲೇ ಮನಸ್ವೀ ಕೆಲಸ, ತಿರುಗಾಟ, ಕಾರ್ಯ-ಕಟ್ಟಲೆ ಓಡಾಡಿದ್ದೆಂದರೆ ಅದಕ್ಕೆ ಅವಳ ನಾಕಡಿ ದೇಹದ ಪ್ರತಿ ಅಣುಅಣುವಿನಲ್ಲಿ ತುಂಬಿದ್ದ ಜೀವಶೃದ್ಧೆ ಮತ್ತು ಏಳು ಜನ್ಮಕ್ಕಾಗುವಷ್ಟಿದ್ದ ಆತ್ಮವಿಶ್ವಾಸ ಕಾರಣ.              ಆ ಕಾಲಕ್ಕೆ ಮನೆಪಾಠ ಮಾಡಿಸಿಕೊಂಡು ಎಲ್ ಎಸ್ ಓದಿದ್ದಳು. ಆದ್ದರಿಂದ ಕನ್ನಡದ ಜೊತೆಗೆ ಇಂಗ್ಲೀಷ್ ಹಿಂದಿಗಳೂ ಬರುತ್ತಿದ್ದವು. ತೀರಾ ಸಣ್ಣ ವಯಸ್ಸಿಗೆ ಮದುವೆಯಾಗಿ ಬಂದು ಏಳು ಜನ ಮೈದುನ, ನಾಲ್ವರು ನಾದಿನಿಯರ ಸಂಸಾರ ಸೇರಿಕೊಂಡು ಅತ್ತೆ ಮಾವನ ಮನೋಭಿಲಾಷೆ ತಿಳಿದು ವ್ಯವಹರಿಸುತ್ತ ನಾಲ್ಕು ಮಕ್ಕಳ ತಾಯಾಗಿ ಆಮೇಲೆ ಗಂಡ ಪ್ರತ್ಯೇಕ ಜಮೀನು ಮಾಡಲು ಹೊರಟಾಗ ಅಲ್ಲಿಯ ಅಟ್ರಾಕಣಿ ಬಿಡಾರಕ್ಕೆ ಸ್ಥಳಾಂತರಗೊಂಡು ಒಂದಿದ್ದರೆ ಒಂದಿಲ್ಲದ ಸಂಸಾರ ನಡೆಸುತ್ತ ಬದುಕು ಕಳೆದಳು. ತೋಚಿದ್ದನ್ನು ಆ ಕ್ಷಣಕ್ಕೆ ಮಾಡಿಬಿಡುವ ಅಜ್ಜ ಪರಿಣಾಮಗಳನ್ನು ಆದಮೇಲೆ ಅನುಭವಿಸುವ ಜಾಯಮಾನದವ. ಯೋಜನೆ, ಸಮಾಲೋಚನೆ, ಯಾರನ್ನಾದರೂ ಹೇಳಿ ಕೇಳುವ ಪ್ರವೃತ್ತಿ ಇಲ್ಲವೇ ಇಲ್ಲ. ಅವನ ಎಲ್ಲಾ ಯಡವಟ್ಟುತನಗಳ ಪರಿಣಾಮ ಉಣ್ಣುವಾಗ ಮಾತ್ರ ಅಜ್ಜಿಗೆ ಪಾಲು. ಮಾಡುವಾಗ ಅವಳೇನಾದರೂ ಸಲಹೆ ಸೂಚನೆ ಕೊಟ್ಟರೆ ಹೀನಾಯದ ಮೂದಲಿಕೆ ಕಟ್ಟಿಟ್ಟ ಬುತ್ತಿ. ಆರಡಿ ಎತ್ತರದ ದೊಡ್ಡ ಗಂಟಲಿನ ಪ್ರಚಂಡ ಧೈರ್ಯದ ಆಸಾಮಿ. ಹಾಗೊಮ್ಮೆ ಎಂದಾದರೂ ಜೋಗದ ತಡಸಲಿಗೆ ಬಂಡೆಯಿಂದ ಧುಮುಕಲು ಭಯವಾದರೆ ತನ್ನ ಧೈರ್ಯ ಕಡ ಕೊಡುವಂತಿದ್ದ.  ಇವಳು ಅವನೆದುರಿಗೆ ಬಿರುಮಳೆಯಲ್ಲಿ ತೊಯ್ದ ಗುಬ್ಬಚ್ಚಿ. ಹಾಗಂತ ಅವಳು ಅನ್ನಿಸಿದ್ದನ್ನು ಆಡದೇ ಬಿಟ್ಟವಳೇ ಅಲ್ಲ. ಅವನೆಷ್ಟೇ ಬೈದು ಕೂಗಿದರೂ ತನ್ನ ಅನಿಸಿಕೆಯನ್ನು ಹೇಳಿಯೇ ಸಿದ್ದ. ಅವನ ಕಿವಿಯೋ ಯಾವುದೋ ಅವಘಡದಲ್ಲಿ ಕೆಪ್ಪಾಗಿತ್ತು. ಇವಳು ಅವನ ಮತ್ತೊಂದು ಕಿವಿಯ ಹತ್ತಿರ ಕೂಗಿಕೂಗಿ ಹೇಳಬೇಕು. ಅವನು ಮೊದಲು ಆಂ ಆಂ ಎಂದು ಆಮೇಲೆ ಕೇಳಿದ ನಂತರ ಅವಳಿಗೆ ಯದ್ವಾ ತದ್ವಾ ಬಯ್ಯಬೇಕು. ನಾವೆಲ್ಲ ಮೊಮ್ಮಕ್ಕಳು ದೊಡ್ಡವರಾದಮೇಲೂ ಹೀಗೇ. ಪಾಪ ನಮ್ಮೆದುರಿಗೆ ಅವಳಿಗೆ ಪ್ರಚಂಡ ಅವಮಾನ ಆಗುತ್ತಿತ್ತು. ಹೆಂಡತಿಯ ಮಾತನ್ನು  ಎಂದೆಂದೂ ಕೇಳತಕ್ಕದ್ದಲ್ಲ ಅಂತ ಅದ್ಯಾವ ಪುರುಷೋತ್ತಮ ದೇವರು ಅವನಿಗೆ ಪ್ರಮಾಣ ಮಾಡಿಸಿ ಕಳಿಸಿದ್ದನೋ ಕಡೆತನಕ ಹಾಗೇ ಇದ್ದ. ತನ್ನ ನಿರ್ಧಾರವನ್ನು ಖಡಕ್ಕಾಗಿ ಹೇಳಿ ಮಾತ್ರ ರೂಢಿಯಿರುವ, ಯಾರ ಮಾತನ್ನು ಕೇಳಿ ಗೊತ್ತಿಲ್ಲದವರಿಗೆ ತಾವು ಕೆಪ್ಪರಾಗಿದ್ದೂ ಗೊತ್ತಾಗುವ ಸಂಭವ ಕಡಿಮೆ. ಯಾಕೆಂದರೆ ಅವರು ಕಿವಿಯನ್ನು ಬಹಳ ಕಡಿಮೆ ಮತ್ತು ಗಂಟಲನ್ನು ಬಹಳ ಜಾಸ್ತಿ ಉಪಯೋಗಿಸುತ್ತಿರುತ್ತಾರೆ.            ಆರಂಭದ ದಿನಗಳಲ್ಲಿ ಬ್ರಿಸ್ಟಾಲ್ ಸಿಗರೇಟು ಸೇದುತ್ತಿದ್ದ ಅಜ್ಜ ಸಾಕಷ್ಟು ಖಾರ ಕೂಡ ತಿನ್ನುತ್ತಿದ್ದ. ಆಮೇಲೆ ಅಸಿಡಿಟಿ ಹೆಚ್ಚಾಗಿ ಕರುಳು ಹುಣ್ಣು ಆದಮೇಲೆ ಎಲ್ಲಾ ಬಿಟ್ಟ. ಮಲ್ಲಾಡಿಹಳ್ಳಿಗೆ ಹೋಗಿ ಯೋಗಾಸನ ಕಲಿತು ಬಂದ. ಒಂದು ದಿನವೂ ತಪ್ಪಿಸಲೇ ಇಲ್ಲ. ಅಜ್ಜಿ ತನ್ನ ಅಸ್ತಮಾಕ್ಕಾಗಿಯೂ ಔಷಧ ಪಡೆದು ಪ್ರಾಣಾಯಾಮ, ಯೋಗಾಸನ ಕಲಿತಳು. ಹೋದಹೋದಲ್ಲಿ ಹೆಂಗಸರಿಗೆಲ್ಲ ಕರೆಕರೆದು ಕಲಿಸುತ್ತಿದ್ದಳು. ಮಗಳ ಮನೆ, ಮೊಮ್ಮಗಳ ಮನೆ ಅಕ್ಕಪಕ್ಕದ ಹೆಂಗಸರೆಲ್ಲ ಅವಳ ಶಿಷ್ಯರೇ. ಅಜ್ಜ ಪ್ರತಿ ರಾತ್ರಿ ಏಳುವರೆಯೊಳಗೆ ಊಟ(ಒಣ ರೊಟ್ಟಿ, ಕಾಯಿಸುಳಿ, ಬಿಸಿ ಅನ್ನ-ಹಾಲು)ಮುಗಿಸಿ ಮಲಗಿ ಬಿಡುತ್ತಿದ್ದ. ಒಂಬತ್ತೆಂದರೆ ಅವನಿಗೆ ಮಧ್ಯರಾತ್ರಿ. ಬೆಳಿಗ್ಗೆ ನಾಕೂವರೆಗೆ ಎದ್ದು ದಡ ದಡ ಬಾಗಿಲು ಹಾಕಿ ತೆಗೆದು ಯೋಗಾಸನ ಮಾಡುತ್ತಿದ್ದ. ಓಂ ಎಂದು ಧ್ಯಾನ ಶುರು ಮಾಡಿದನೆಂದರೆ ಜೋಗದ ಕಾಡಿನ ಪ್ರಾಣಿಗಳಿಗೆಲ್ಲ ಅಲಾರಾಂ ಕೂಗಿದಂತಾಗುತ್ತಿತ್ತು. ಅಜ್ಜಿ ಎದ್ದು ಕೆಂಪಕ್ಕಿ ಗಂಜಿ ತಿಂಡಿ ಚಾ ಅಂತೆಲ್ಲ ತಯಾರಿ ಮಾಡಬೇಕು. ಬೆಳಿಗ್ಗೆ ಏಳೆಂದರೆ ಎಲ್ಲಾ ರೆಡಿ. ನಸುಕಿನ ಆರು ಗಂಟೆಗೆ ಅಜ್ಜನ ರೆಡಿಯೊ ಶುರುವಾಗುತ್ತಿತ್ತು. ದಟ್ಟ ಕಾಡಿನ ಕಣಿವೆಯೊಳಗೆ ಅದು ಹೇಗೆ ರೆಡಿಯೊ ತರಂಗಗಳು ಬರಲು ಸಾಧ್ಯ? ಗೊರಗೊರ ಸಪ್ಪಳದ ನಡುನಡುವೆ ಚಿಂತನ. ರೈತರಿಗೆ ಸಲಹೆ, ಪ್ರದೇಶ ಸಮಾಚಾರ ಇಷ್ಟನ್ನು ಕೇಳಿ ಅಜ್ಜ ತಿಂಡಿಗೆ ಬರುತ್ತಿದ್ದ. ಸಂಜೆ ಏಳಕ್ಕೆ ಮತ್ತೆ ರೇಡಿಯೊ ಗೊರಗೊರ. ಕೃಷಿರಂಗದಲ್ಲಿ ಬಂದಲಿ ಎತ್ತ ಕಾಳಿಂಗ ಎತ್ತ ಮಾಲಿಂಗ ಅಂತೆನೋ ಅದರ ಟೈಟಲ್ ಹಾಡು ಬರುತ್ತಿತ್ತು. ಯುವವಾಣಿಯ ಹಿನ್ನೆಲೆ ಸಂಗೀತ ಬಹಳ ಚೆನ್ನಾಗಿರುತ್ತಿತ್ತು. ಆದರೆ ಅದು ಅಜ್ಜನ ಊಟದ ಹೊತ್ತು ಪಟ್ಟನೆ ರೆಡಿಯೊ ಆರುತ್ತಿತ್ತು. ಬೀಟೆಯ ಹಳೆ ಕುರ್ಚಿ ಹಿಂದಕ್ಕೆ ಸರಿದ ಸಪ್ಪಳ. ಆ ಕೋಣೆಯ ಲೈಟು ಆರಿಸಿ ಡಬಾರನೆ ಅಜ್ಜ ಬಾಗಿಲು ಹಾಕುತ್ತಿದ್ದ. ತಕ್ಷಣ  ಒಳಗಿನ ಹೆಣ್ಣು ಮಕ್ಕಳಿಗೆ ಸಿಗ್ನಲ್. ಒರೆದಿಟ್ಟ ರೊಟ್ಟಿ ಕಾವಲಿಗೆ ಹಾಕಿ ತಾಟು ರೆಡಿ ಮಾಡಿ ಅಂತ. ಇಬ್ಬಿಬ್ಬರು ಸೊಸೆಯರಿದ್ದರೂ ಅಜ್ಜ ಬದುಕಿದ್ದ ಅಷ್ಟೂ ದಿನ ಅವನ ಕಿರಿಕಿರಿಯ ಸೇವೆಗೆ ಅಜ್ಜಿ ತಾನೇ ಹೋಗುತ್ತಿದ್ದಳು. ಅವಳು ಮಗಳ ಮನೆಗೆ ಹೋದಾಗ ಅಜ್ಜ ಸಾಕಿದ ಬೆಕ್ಕಿನ ಹಾಗಿರುತ್ತಿದ್ದ. ಸೊಸೆಯರಿಗೆ ಚೂರೂ ಕಿರಿಕಿರಿ ಮಾಡುತ್ತಿರಲಿಲ್ಲ. ಅದಕ್ಕೆ ದೊಡ್ಡ ಸೊಸೆ ಅವನ ಕಾಟ ಹೆಚ್ಚಾದಾಗ ಅತ್ತೆಗೆ ನೀವು ಮಗಳ ಮನೆಗೆ ಹೋಗಿದ್ದು ಬನ್ನಿ ಎಂದು ಸಲಹೆ ಕೊಡುತ್ತಿದ್ದಳು. ಅಜ್ಜಿ ಅಜ್ಜನಿಗೂ ಉಳಿದ ಜಗತ್ತಿಗೂ ಮಧ್ಯದ ಸ್ಟೆಬಿಲೈಸರ ಇದ್ದ ಹಾಗಿದ್ದಳು. ಅವನ ಕೋಪ ತಾಪ ತಿಕ್ಕಲುಗಳನ್ನೆಲ್ಲ ತಾನೇ ಪಡೆದು ತಡೆದು ಬಿಡುತ್ತಿದ್ದಳು. ಉಳಿದವರು ಸುರಕ್ಷಿತರಾಗುತ್ತಿದ್ದರು. ಹಾಗಂತ ಗಂಡ ಹೇಗಿದ್ದರೂ ಏನು ಮಾಡಿದರೂ ಸರಿ ಎನ್ನುವ ಸತಿ ಶಿರೋಮಣಿ ಖಂಡಿತ ಆಗಿರಲಿಲ್ಲ. ಅವನ ಲೋಪದೋಷಗಳ ಸಂಪೂರ್ಣ ಅರಿವಿತ್ತು. ಯಾರ ಜೊತೆಗಾದರೂ ಅಜ್ಜ ಜಗಳಾಡಿದರೆ ಅಥವಾ ಅಕ್ಸಿಡೆಂಟ ಮಾಡಿಕೊಂಡು ಬಂದರೆ ಇವನದೇ ತಪ್ಪಿರುತ್ತದೆಯೆಂದು ಅಂದಾಜು ಮಾಡಿ ಹೇಳುತ್ತಿದ್ದಳು. ಎಂಭತ್ತರ ಇಳಿ ವಯಸ್ಸಿನಲ್ಲೂ ತಲೆಗೆ ರುಮಾಲು ಸುತ್ತಿಕೊಂಡು ಯಮವೇಗದಲ್ಲಿ ಬೈಕು ಹತ್ತಿ ಹೊಂಟು ಬಿಡುತ್ತಿದ್ದ. ಡುಗುಡುಗು ಶಬ್ದ ಕೇಳಿ ಕಿಡಕಿಯಲ್ಲಿಣುಕಿ ಬೈಕು ಹೋದ ದಿಕ್ಕು ನೊಡಿ ಅವನೆಲ್ಲಿಗೆ ಹೋಗಿರಬಹುದು ಅಂತ ಅಂದಾಜು ಮಾಡಬೇಕಿತ್ತೇ ಹೊರತು ಹೇಳಿಕೇಳಿ ಹೋಗುವ ಕ್ರಮ ಇರಲೇ ಇಲ್ಲ. ಆಸುಪಾಸಿನ ಜನ ಅವನ ಬೈಕಿಗೆ ದಾರಿ ಕೊಟ್ಟು ತಾವಾಗೇ ಸರಿಯುತ್ತಿದ್ದರು. ಗೌರವದಿಂದಲ್ಲ ಪ್ರಾಣದಾಸೆಗೆ. ಸಣ್ಣಪುಟ್ಟ ಕೋಳಿ ದನ ತಾಗುವುದು ಎಲ್ಲಾದರೂ ಡಿಕ್ಕಿಯಾಗುವುದು ಮಾಮೂಲೇ ಆಗಿತ್ತು. ಯಾರೂ ಅವನ ಹಿಂದೆ ಕೂರಬಾರದೆಂದು ಹೆಂಗಸರು ಮಕ್ಕಳಿಗೆ ತಾಕೀತು ಮಾಡಲಾಗಿತ್ತು. (ಈ ರೀತಿಯ ಆತ್ಮರಕ್ಷಣೆಯ ಕ್ರಮಗಳ ವಕ್ತಾರ ಅವನ ಅಳಿಯನಾಗಿದ್ದ)               ಕಾಡಿನ ನಡುವೆ ಪೇಟೆಯ ಸವಲತ್ತುಗಳಿಂದ ದೂರವಾಗಿ ಬದುಕುತ್ತಿದ್ದ ಕಾರಣಕ್ಕೋ ಅಥವಾ ಯಾವುದಕ್ಕೂ ಕಾಯದ ಜೀ ಎನ್ನದ ಸ್ವಭಾವಕ್ಕೋ ಅಜ್ಜ ಸ್ವಾವಲಂಬಿಯಾಗಿದ್ದ. ಹಳೆ ಟಯರಿನಿಂದ ಚಪ್ಪಲಿ ಮಾಡಿಕೊಳ್ಳುತ್ತಿದ್ದ. ಹರಿದ ಕಂಬಳಿ ಕತ್ತರಿಸಿ, ಹೊಲಿದು ಕೋಟು ಟೊಪ್ಪಿ ಮಾಡಿಕೊಳ್ಳುತ್ತಿದ್ದ. ಬೈಕು, ಪಂಪುಸೆಟ್ಟು, ಟ್ರಾನ್ಸಫರ‍್ಮರು ಎಲ್ಲದರ ರಿಪೇರಿ ಅತಿ ಚೆನ್ನಾಗಿ ಮಾಡುತ್ತಿದ್ದ. ಅವನ ಗಂಡು ಮಕ್ಕಳು ಈ ಎಲ್ಲಾ ವಿದ್ಯೆಗಳಲ್ಲಿ ಪಾರಂಗತರೇ. ಆದರೆ ಎಲ್ಲರಿಂದಲೂ ಸಾಮೂಹಿಕ ನಿಂದನೆಗೆ ಗುರಿಯಾದ ಅಜ್ಜನ ವಿದ್ಯೆಯೆಂದರೆ ಮೊಮ್ಮಕ್ಕಳ ಕೂದಲು ಕತ್ತರಿಸುವ ಹಜಾಮತಿ. ಅವನಿಗೆ ಗಂಡು ಹುಡುಗರು ಉದ್ದ ಕೂದಲು ಬಿಟ್ಟುಕೊಂಡು ತಿರುಗಿದರೆ ಕಂಡಾಪಟ್ಟೆ ಸಿಟ್ಟು ಬರುತ್ತಿತ್ತು. ಬಾರಾ ಎಂದು ಕರೆದು ಕೂರಿಸಿಕೊಂಡು ಕೈಗೆ ಸಿಕ್ಕಿದ ಕತ್ತರಿಯಿಂದ ನಿರ್ದಯವಾಗಿ ಕತ್ತರಿಸುತ್ತಿದ್ದ. ಕತ್ತರಿಯ ಮೊಂಡುತನ, ಅಜ್ಜನ ನೇತ್ರಗಳ ಮಂದತನ ಎರಡೂ ಕೂಡಿ ಭಯಂಕರವಾದ ಆಕಾರದಲ್ಲಿ ಮೆಟ್ಟಿಲು ಮೆಟ್ಟಿಲಾಗಿ ಅಲ್ಲಲ್ಲಿ ವಿರಳ ಭೂಮಿಯಾಗಿ ಮೊಮ್ಮಕ್ಕಳ ತಲೆ ತಯಾರಾಗುತ್ತಿತ್ತು. ಅಜ್ಜನ ಗಂಟಲಿಗೆ ಹೆದರುವ ಆ ಹುಡುಗರು ಉಕ್ಕಿ ಬರುವ ಅಳುವನ್ನು ಭಯಕ್ಕೆ ವರ್ಗಾಯಿಸಿ ನಡುಗುತ್ತ ಕೂರುತ್ತಿದ್ದರು. ಮತ್ತೆ ಅವರನ್ನು ಪಾರು ಮಾಡಲು ಅಜ್ಜಿಯೇ ಓಡಿ ಬರಬೇಕಿತ್ತು. ಕಡೆಗೆ ಅವಳೇ ಮೊಮ್ಮಕ್ಕಳಿಗೆ ಎಂದೆಂದೂ ಅಜ್ಜ ಹಜಾಮತಿಗೆ ಕರೆದರೆ ಹೋಗಬಾರದೆಂದು ತಾಕೀತು ಮಾಡಬೇಕಾಯಿತು. ಕಡೆಗಾಲದಲ್ಲಿ ಅಜ್ಜನಿಗೆ ಕ್ಯಾನ್ಸರ್ ಆದಾಗ ಅವನ ತಿಕ್ಕಲು ನಿರ್ಧಾರಗಳನ್ನು ಸಹಿಸಿಕೊಂಡು ಕ್ಯಾನ್ಸರ್ ಆಸ್ಪತ್ರೆ ರೇಡಿಯೇಷನ್ ಅಂತೆಲ್ಲಾ ಅಲೆಯುವಾಗ ಅವಳಿಗೆ ತನ್ನ ರೋಗದ ಬಗ್ಗೆ ಮರೆತೇ ಹೋಗಿತ್ತು. ಮುರುಟಿದ ಬೆರಳುಗಳ ಕಾಲನ್ನು ಅಡ್ಡಡ್ಡ ಹಾಕುತ್ತ ಏದುಸಿರು ಬಿಡುತ್ತ ಆಸ್ಪತ್ರೆಯ ಮೆಟ್ಟಿಲನ್ನು ಗೊಣಗದೇ ಹತ್ತಿಳಿದಳು.                ಅನಾಮತ್ತಾಗಿ ಅರವತ್ತು ವರ್ಷ ಸಂಸಾರ ಮಾಡಿದ ಅಜ್ಜನ ಜೊತೆಗೆ ಅವನೆಲ್ಲ ಗುಣಸ್ವಭಾವಗಳೊಂದಿಗೆ ಏಗುವುದೇ ಬದುಕಾಗಿಬಿಟ್ಟವಳಿಗೆ ಅವನ ಇಲ್ಲದಿರುವಿಕೆಯಿಂದ ಉಂಟಾದ ಶೂನ್ಯ ತುಂಬಿಕೊಳ್ಳುವುದು ಕಷ್ಟವಾಗಿರಬೇಕು. ಅಜ್ಜನ ಸೇವೆ ಅವಳ ದಿನಚರಿಯ ಎಷ್ಟು ದೊಡ್ಡ ಭಾಗವಾಗಿತ್ತೆಂದು ಗೊತ್ತಾಗುವಾಗ ಅದರ ಖಾಲಿತನ ಭರಿಸುವುದು ಸಮಸ್ಯೆಯಾಗಿಬಿಟ್ಟಿತು. ನಿಧಾನಕ್ಕೆ ಅಸ್ತಮಾ ನೆನಪಾಯಿತು. ದುಡಿಯಲಿಕ್ಕೇನು ಉಳಿದಿಲ್ಲವೆಂಬಂತೆ ಅಶಕ್ತತೆ ಆವರಿಸಿತು. ಸ್ಟೆರಾಯ್ಡಿನ ಧಾಳಿಗೆ ಶರಣಾದ ಎಲುಬುಗಳು ನೋಯಲು

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ Read Post »

ಇತರೆ, ಜೀವನ

ಕಾಲ ಎಂದಿಗೂ ನಿಲ್ಲುವದಿಲ್ಲ

ಸ್ಮಿತಾ ಭಟ್ ಮಿಲಿಯನ್ ಗಟ್ಟಲೆ ವರ್ಷಗಳಿಂದ ಈ ಭೂಮಿಯ ಮೇಲೆ ಏನೆಲ್ಲ ಸಂಭವಿಸಿತೋ ಇಂದಿನವರೆಗೂ ಯಾರಿಗೂ ಸ್ಪಷ್ಟವಾದ ಮಾಹಿತಿ ಇಲ್ಲ. ಹೀಗಿತ್ತು,ಹಾಗಿತ್ತು,ಏನೋ ನಡೆದಿತ್ತು, ಎಂದು ಇತಿಹಾಸ ಪುಟಗಳಿಂದ ಅಷ್ಟೊ ಇಷ್ಟೊ ತಿಳಿಯುತ್ತೇವೆ,ಮತ್ತೊಂದಿಷ್ಟು ನಮ್ಮ ಊಹೆ. ಕಾಲದ ಜೊತೆಗೆ ಎಲ್ಲವೂ ಉರುಳುತ್ತವೆ ಎನ್ನುವದು ನಿತ್ಯ ಸತ್ಯ. ಸವೆದ ಹೆಜ್ಜೆಗಳ ಜಾಡು ಎಷ್ಟರ ಮಟ್ಟಿಗೆ ಇಂದು ಉಳಿದುಕೊಂಡಿದೆ.ಎಲ್ಲವೂ ಮಸುಕಾಗುತ್ತಲೇ ಹೋಗುತ್ತದೆ. ಹೊಸ ನೀರಿಗೆ ಹಳೆಯ ನೀರು ಕೊಚ್ಚಿಹೋಗಿ ಸಮುದ್ರಸೇರಿ ಅಸ್ತಿತ್ವವನ್ನೇ ಕಳೆದುಕೊಂಡಂತೆ. ಆಳಿದ ರಾಜ, ಕಟ್ಟಿದ ಕೋಟೆ,ಜಾರಿಯಾದ ನಿಯಮ,ತ್ಯಾಗದ ಬದುಕು,ಮಾಡಿದ ಯುದ್ಧ ಮಹಾ ಮಹಾ ರೋಗ, ಪ್ರತಿಯೊಂದು ಅಂದರೆ ಪ್ರತೀಯೊಂದೂ ಕಾಲ ತನ್ನ ಗರ್ಭದೊಳಗೆ ಎಲ್ಲವನ್ನೂ ಕರಗಿಸಿ ಬಿಡುತ್ತದೆ.ಮರೆಸಿ ಬಿಡುತ್ತದೆ. ಕಾಲಕ್ಕೆ ಮಾತ್ರ ಆ ಶಕ್ತಿ ಇರುವದು. ಇಷ್ಟೆಲ್ಲ ಗೊತ್ತಿದ್ದೂ ನಾವೇಕೆ ಪ್ರತೀ ಸಂದರ್ಭದಲ್ಲೂ ಭಯ ಬೀಳುತ್ತೇವೆಯೋ ಗೊತ್ತಿಲ್ಲ. ಇಂದು ಇದ್ದಂತೆ ನಾಳೆ ಇರಲಾರದು ನಿತ್ಯವೂ ಬೆಳಗುವ ಸೂರ್ಯ ಹೊಸಭರವಸೆಯನ್ನಂತೂ ತರುತ್ತಾನೆ. ಆದರೆ ಅದಕ್ಕೆ ತರೆದುಕೊಳ್ಳುವ ಮನಸ್ಥಿತಿಯಾಗಲಿ, ದಾರಿಯಾಗಲಿ ನಮಗೆ ಗೋಚರಿಸುವದೇ ಇಲ್ಲ. ನಾಳೆ ನಮಗೇನಾಗುತ್ತದೋ,ನೌಕರಿ ಉಳಿಯುತ್ತದಾ? ಮನೆ ಖರೀದಿಸಲು ಆಗುತ್ತದಾ? ಏನೇನೋ ಕೆಲಸಗಳನ್ನು ಎತ್ತಿಟ್ಟುಕೊಂಡಿದ್ದೆ ಅದನ್ನೆಲ್ಲ ಮುಗಿಸುತ್ತೇನಾ? ಅಕಸ್ಮಾತ್ ಸತ್ತೇ ಹೋದರೆ!? ನಮ್ಮ ಆಲೋಚನೆಗಳು ಹೀಗೆ ಒಂದರ ಹಿಂದೊಂದು ಗಿರಕಿ ಹೊಡೆಯುತ್ತಲೇ ಹೋಗುತ್ತದೆ. ಬೇಕು ಎಲ್ಲವೂ ಬದುಕಿರುವವರೆಗೆ ನಿಜ ಆದರೆ ಬದುಕುವದೇ ಆಸೆಗಳಿಗೆ ಅಂತಾಗಬಾರದು ನಮ್ಮ ಸಮಯ ಯಾವ ಕ್ಷಣ ಬೇಕಾದರೂ ಮುಗಿಯಬಹುದು ಅದಕ್ಕೊಂದು ಸಿದ್ದತೆ ಸದಾ ಬೇಕು. ಬದುಕು ನಶ್ವರ ಎಂದು ಎದ್ದು ಹೊರಟ ಬುದ್ದನನ್ನು ನಾವು ಪ್ರೀತಿಸುತ್ತೇವೆ, ಆದರೆ ಅವನ ತತ್ವಗಳನ್ನು ಮರೆಯುತ್ತೇವೆ. ಜಗತ್ತಿಗೆ ಬರುವ ಅಪಾಯಗಳು ಇಂದು ನಿನ್ನೆಯದಲ್ಲ ಅಯಾಯಾ ಕಾಲಕ್ಕೆ ತಕ್ಕಂತೆ ಗಂಡಾಂತರಗಳು,ಅವಘಡಗಳು, ಪ್ರಕೃತಿ ವಿಕೋಪಗಳು,ಸಾವು ನೋವುಗಳು ಸಂಭವಿಸುತ್ತಲೇ ಬಂದಿದೆ. ಮತ್ತೆ ಹೊಸದಾಗಿ ರೂಪಗೊಂಡಿದೆ ಕೂಡಾ ಒಮ್ಮೆ ಪ್ರಳಯ ಕಾಲ ಸನ್ನಿಹಿತ ವಾದಾಗ  ವೈವಸ್ವತ ಮನುವನ್ನು ಕುರಿತು ವಿಷ್ಣು ಹೇಳುತ್ತಾನೆ. ಸದ್ಯದಲ್ಲೇ ಮಹಾ ಪ್ರಳಯ ವೊಂದು ಸಂಭವಿಸಲಿದೆ ಒಂದು ದೊಡ್ಡ ಹಡಗನ್ನು ತೆಗೆದುಕೊಂಡು ಅದರಲ್ಲಿ ವೇದಗಳನ್ನೂ, ಕೆಲವು ಪ್ರಾಣಿಗಳನ್ನೂ,ಸಸ್ಯಗಳ ಬೀಜಗಳನ್ನೂ, ಶೇಖರಿಸಿಡು. ನೀನು ಮತ್ತು ನಿನ್ನ ಪತ್ನಿ ಅದರೊಳಗೆ ಜೀವಿಸಿ.  ಆ ಹಡಗಿನ ರಕ್ಷಣೆ ನನ್ನದು ಎನ್ನುತ್ತಾನೆ. ಒಂದು ದಿನ ಇಡೀ ಭೂಮಿಯೇ ನೀರಿನಿಂದ ತುಂಬಿ ಮಹಾಪ್ರಳಯವೊಂದು ಸಂಭವಿಸಿಯೇ ಬಿಡುತ್ತದೆ. ವಿಷ್ಣು ಮೀನಿನ ರೂಪದಲ್ಲಿ ಬಂದು ಹಡಗನ್ನು ತನ್ನ ಕೋರೆಹಲ್ಲಿಗೆ ಕಟ್ಟುವಂತೆ ಮನುವಿಗೆ ಹೇಳಿ ಪ್ರವಾಹಕ್ಕೆ ನುಚ್ಚು ನೂರಾಗುವಂತಿದ್ದ ಹಡಗಿಗೆ ರಕ್ಷಣೆ ಕೊಡುತ್ತಾನೆ.  ವರ್ಷಗಳ ನಂತರ ಪ್ರವಾಹ ತಗ್ಗಿದ ಮೇಲೆ ಮತ್ತೆ ಸೃಷ್ಟಿಯ ಕಾರ್ಯ ನಿಧಾನವಾಗಿ ಆರಂಭವಾಗುತ್ತದೆ. ಅದೇ ಕೂಡಿಟ್ಟ ಬೀಜಗಳು ಮನುವಿನ ಸಂಸಾರ. ಅಲ್ಲಿಂದ ದ್ವಿಗುಣವಾಗುತ್ತ ದ್ವಿಗುಣವಾಗುತ್ತ  ಬಂದ ಪ್ರತೀ ಸೃಷ್ಟಿ ಬ್ರಹತ್ ಬ್ರಹ್ಮಾಂಡವೇ ಆಗಿ ನಿಲ್ಲುತ್ತದೆ. ಸಂಪೂರ್ಣ ನಾಶ ಎನ್ನುವದು ಎಂದಿಗೂ ಅಗಿಲ್ಲ. ಅತಿ ಆಯಿತು ಎಂದು ಅನ್ನಿಸಿದಾಗೆಲ್ಲ  ಕಾಲಚಕ್ರದ ಸುಳಿಗೆ ಸಿಲುಕಿಸಿ ಮತ್ತೆ  ಗರ್ಭದೊಳಗೆ ಎಳೆದುಕೊಂಡೇ ಬಿಡುತ್ತದೆ ಭೂಮಿ. ಇಂತಹದ್ದೊಂದು ಸಮತೋಲನದಿಂದಲೇ ಮಿಲಿಯನ್ ಗಟ್ಟಲೆ ವರ್ಷಗಳಿಂದಲೂ ಭೂಮಿ  ತನ್ನ ಅಸ್ತಿತ್ವವನ್ನು ಕಾಪಾಡಿಕೊಂಡೇ ಬಂದಿದೆ. ಸೃಷ್ಟಿ, ಸ್ಥಿತಿ, ಲಯ,ಗಳ ಜವಾಬ್ಧಾರಿ ಹೊತ್ತ ತ್ರಿಮೂರ್ತಿಗಳು ಒಬ್ಬರಿಗೊಬ್ಬರು ಪೂರಕವಾಗಿಯೇ ನಡೆದುಕೊಳ್ಳುತ್ತಾರೆ ಎನ್ನುವ ನಂಬಿಕೆಯಮೇಲೆ ನಮ್ಮ ಧರ್ಮ ನಿಂತಿದೆ. ಅದು ಸತ್ಯ ಕೂಡಾ ಆಗಿದೆ. ಈಗ ಬಂದಿರುವ ಕರೋನಾ ಎಂಬ ಮಹಾಮಾರಿಯಂತ ರೋಗದಿಂದ ಜಗತ್ತೇ ನಾಶವಾಯಿತು,ಇನ್ನು ಮನುಷ್ಯ ಭೂಮಿಯ ಮೇಲ ಬದುಕುವದೇ ಅಸಾಧ್ಯ,ಹಾಗಾಯಿತು ಹೀಗಾಯಿತು ಜನರು ಖಾಲಿಯೇ ಆದರು ಎನ್ನುವಂತೆ ಭಯಬೀಳಿಸುವ ಟಿ,ವಿ ಚಾನಲ್ಗಳನ್ನು ಮೈಮೇಲೆ ಎಳೆದುಕೊಂಡು ನಾವೂ ದೆವ್ವ ಬಂದವರಂತೆ ಆಡುತ್ತಿದ್ದೇವೆ. ಚಿಂತಾಜನಕರಾಗಿದ್ದೇವೆ.ಮಾನಸಿಕ ಅಸ್ವಸ್ಥರಾಗಿದ್ದೇವೆ.  ಹಿಂದೊಮ್ಮೆ ನಾವೆಲ್ಲ ಪ್ರಳಯವೇ ಸಂಭವಿಸುತ್ತದೆ ಸಂಪೂರ್ಣ ಭೂಮಿಯೇ ನಾಶವಾಗುತ್ತದೆ ಎಂದು ಅದೆಷ್ಟು ಬೊಬ್ಬೆ ಹೊಡೆದು ಕೊಂಡಿಲ್ಲ ಹೇಳಿ. ಅಯ್ಯೋ ಅಜ್ಜೀ ಇದೆಲ್ಲ ಯಾವಾಗ ಮುಗಿತದ್ಯೋ ಏನ್ ಕಥೆನೋ ಎಷ್ಟೊಂದು ಕಷ್ಟ ಅನುಭವಿಸುತ್ತಿದ್ದಾರೆ. ಎಲ್ಲಾ ವಿಚಿತ್ರ ಆಗೋಯ್ತು ಜಗತ್ತೇ .ಅಂತ ಗೊಣಗುತ್ತಿದ್ದೆ.  ಸುಮಾರು 85 ವರ್ಷದ ಅಜ್ಜಿ ಹೇಳುತ್ತಿದ್ದರು. ಅಯ್ಯೊ ಕೂಸೇ ನನ್ನ ಅಜ್ಜಿಯ ಕಾಲದಲ್ಲಿ ಇಂತಹದ್ದೇ ಒಂದು ಮಹಾ ಮಾರಿ ರೋಗ ಬಂದಿತ್ತಂತೆ. “ಗಾಂಡ್ ಗುಂದಿಗೆ” ರೋಗ ಅಂತಿದ್ರು ಅದಕ್ಕೆ. ಊರಿಗೆ ಊರೇ ಖಾಲಿ ಅಗ್ತಿತ್ತು. ಸುಡೋಕು ಯಾರೂ ಇರ್ತಿರಲಿಲ್ಲ ಗೊತ್ತಾ!? ಏನೂ ಔಷಧ ಇಲ್ಲದೇ ಇರೋ ಕಾಲ್ದಲ್ಲೇ ಅದನ್ನೇ ಗೆದ್ದು ಬಂದಿಲ್ವ ನಾವೆಲ್ಲ. ಮತ್ತೆ ಎಷ್ಟು ಬೆಳೆದಿದೆ ನೋಡು ಜನಸಾಗರ.ಸುಮ್ನೇ ಚಿಂತೆ ಮಾಡ್ತಾರೆ ಜನ.ಏನೂ ಆಗಲ್ಲ ಭಗವಂತಂಗೆ ಎಲ್ಲ ಗೊತ್ತಿರ್ತದೆ ಸುಮ್ಕಿರು ಅಂದ್ಬಿಟ್ಲು. ಯಾವ ರೋಗದ ಕುರಿತು ಅಜ್ಜಿ ಮಾತಾಡಿದ್ಲು ಗೊತ್ತಿಲ್ಲ. ಅದ್ರೆ ಬಂದಿದ್ದು ಸತ್ಯ ಅದಕ್ಕೆ ಪುರಾವೆಗಳನ್ನೂ ಕೊಡುತ್ತಿದ್ರೆ ಮೈ ಜುಂ ಎಂದಿತು ಆಗಲೇ ಅನ್ನಿಸಿದ್ದು ಆಗಬಾರದ್ದು ಏನು ಆಗಿದೆ ಈಗ. ನಿಜ ಜನರ ಸಾವು, ನೋವು, ಆಕ್ರಂದನ, ಮನಸನ್ನು ಘಾಸಿಗೊಳಿಸುತ್ತವೆ. ಆದರೆ ಬದುಕಿರುವವರು ನಮ್ಮಿಂದ ಸಾದ್ಯವಾದಷ್ಟು ಮಾನವೀತೆಯಿಂದ, ವಿಧೇಯರಾಗಿ ಯೋಚಿಸಿದರೆ, ನಡೆದುಕೊಂಡರೆ ಸಾಕಲ್ಲವೇ ಇನ್ನೊಂದು ಜೀವ ತನ್ನಿಂದ ತಾನೇ ಉಸಿರಾಡುತ್ತದೆ. ಸಾಯುವ ಪ್ರತೀ ಜೀವವನ್ನು ರಕ್ಷಿಸಲು ಯಾರಿಂದಲೂ ಸಾದ್ಯವಿಲ್ಲ ಸಾದ್ಯವಿದ್ದಷ್ಟು ಮಾಡ ಬಹುದಲ್ಲ. ಆ ನಿಟ್ಟಿನಲ್ಲಿ ಸಾಕಷ್ಟು ಜನ ಡಾಕ್ಟರ್ ಗಳು ಪೋಲೀಸರು ದಾದಿಯರು ಕಾರ್ಮಿಕರು ದಿನ,ರಾತ್ರಿ ಇಲ್ಲದೇ ದುಡಿಯುತ್ತಲೇ ಇದ್ದಾರೆ. ಕೇವಲ ಅವರಷ್ಟೇ ದುಡಿದರೆ ತ್ಯಾಗ ಮಾಡಿದರೆ ಸಾಕೇ? ಪ್ರತಿಯೊಬ್ಬ ಮನುಷ್ಯನಿಗೂ ಅವನದೇ ಆದ ಕರ್ತವ್ಯಗಳಿದೆ ಅದನ್ನು ನಿಸ್ವಾರ್ಥತೆಯಿಂದ ಮಾಡಬೇಕಿದೆ. “ಕರ್ಮಣ್ಯೇವಾ ದಿಕಾರಸ್ತೇ ಮಾ ಫಲೇಷು ಕದಾಚನ” ಭಗವದ್ಗೀತೆಯಲ್ಲಿ ಶ್ರೀಕೃಷ್ಣನೇ ಹೇಳಿದ್ದಾನೆ ಫಲಾ ಫಲಗಳ ಅಪೇಕ್ಷೆ ಬೇಡಾ ಕೇವಲ ಕರ್ಮಗಳನ್ನು ಮಾಡು ಎಂದು ಅವರವರ ಕರ್ಮಳಿಗನುಸಾರ ಬದುಕನ್ನು ಭಗವಂತ ಕರುಣಿಸಿಯೇ ಕರುಣಿಸುತ್ತಾನೆ ಮತ್ತೇಕೆ ಭಯ. ಆಡಂಬರವಿಲ್ಲದೇ ಜೀವಿಸುವುದ ಕಲಿಯಬೇಕಿದೆ. ಮನುಕುಲಕ್ಕೊಂದು ಪಾಠ ಕಲಿಸಲೆಂದೇ ಈ ಕರೋನಾ ಬಂದಿದೆಯೇನೋ ಅನ್ನಿಸುತ್ತದೆ ಬಹಳ ಸಲ. ಸುಮ್ಮನೇ ಭಯಬೀಳುವದರಲ್ಲಿ ಅರ್ಥವಿಲ್ಲ ಒಂದಿಷ್ಟು ಜಾಗೃತೆಯಲ್ಲಿ ಜೀವಿಸಿದರೆ ಆಯಿತು. ಮುಂದಿನದು ದೈವ ಚಿತ್ತ ಎನ್ನುವ ಮನೋ ಬಲ ತಂದುಕೊಳ್ಳಬೇಕು. ಮನುಷ್ಯರಿಗಿಂತಲೂ ಅಬಲರಾದ, ಯಾವ ಪ್ರಾಣಿ, ಪಕ್ಷಿ ,ಮರಗಳು, ಯಾರಿಂದಲೂ ಏನನ್ನೂ ಬೇಡುವದಿಲ್ಲ, ತಮ್ಮ ತಮ್ಮ ಸ್ವಪ್ರಯತ್ನದಿಂಲೇ ಬದುಕುತ್ತವೆ. “ಸರ್ವೆವೈಲ್ ಆಪ್ ದಿ ಫಿಟ್ಟೆಸ್ಟ್”ಎನ್ನುವ ಡಾರ್ವಿನ್  ಸಿದ್ದಾಂತ ಎಂದಿಗೂ ಸತ್ಯವೇ ಆಗಿದೆ. ಹುಟ್ಟು ಸಾವುಗಳಿಂದ ಯಾರೂ ತಪ್ಪಿಸಿಕೊಳ್ಳಲಾರರು. ಬಂದೊದಗಿದ ಭಯದಿಂದ ಹೊರಗೆ ಬನ್ನಿ ವಿಷಾಲವಾಗಿ ಯೋಚಿಸಿ ಹೊಸಬೆಳಕಿನ ಕಿರಣವೊಂದು ನಮಗಾಗಿ ಸ್ವಾಗತಿಸುತ್ತದೆ. *************

ಕಾಲ ಎಂದಿಗೂ ನಿಲ್ಲುವದಿಲ್ಲ Read Post »

ಇತರೆ, ಜೀವನ

ಕೋವಿಡ್-19,ಆತ್ಮಾವಲೋಕನ

ಸುರೇಶ್ ಎನ್.ಶಿಕಾರಿಪುರ ಕೋವಿಡ್ -೧೯ ಆತ್ಮಾವಲೋಕನದ ಅದೃಶ್ಯ ದೂತ. ತೊಂಬತ್ತರ ದಶಕದಿಂದ ಇಲ್ಲಿಯ ವರೆಗೆ ಅಂದರೆ ಸುಮಾರು ಮೂವತ್ತು ವರ್ಷಗಳಿಂದ ಈ ದೇಶದಲ್ಲಿ ಮಂದಿರ – ಮಸೀದಿಗಾಗಿ ನಡೆದ ಕಲಹ ಕಿತ್ತಾಟ ಹೋರಾಟ ರಾಜಕೀಯ ಈಗ ಫಲ ನೀಡುತ್ತಿದೆ. ಬಿತ್ತಿದ್ದೇ ಬೆಳೆಯುವುದು. ಜ್ಞಾನವನ್ನು ಬಿತ್ತಿದರೆ ಜ್ಞಾನ ಅಜ್ಞಾನವನ್ನು ಬಿತ್ತಿದರೆ ಅಜ್ಞಾನ. ಈ ದೇಶದ ಬಹುದೊಡ್ಡ ಯುವ ಸಮುದಾಯವನ್ನು ಮಂದಿರ ನಿರ್ನಾಮ ಮತ್ತು ನಿರ್ಮಾಣಕ್ಕೆ ಹುರಿದುಂಬಿಸಿ ನಾನಾ ಬಗೆಯ ಧಾರ್ಮಿಕ ತಳಹದಿಯ ಸಂಘಟನೆಗಳನ್ನು ಕಟ್ಟಿ ಹಿಂದೂ ರಾಷ್ಟ್ರ ನಿರ್ಮಾಣದ ಕಾರ್ಯಕ್ಕೆ ಯೋಧರನ್ನಾಗಿ ಪ್ರಯೋಗಿಸಲಾಯಿತು. ಈಗಲೂ ಅದು ಮುಂದುವರೆದೇ ಇದೆ. ಈ ಮತೀಯ ಹೋರಾಟಗಳು ಸೃಷ್ಟಿಸಿದ ಹಿಂಸೆ ಒಡಕು ಅಶಾಂತಿ ಅಂಧಕಾರ ಅಪನಂಬಿಕೆ ಅಂತಿಂಥಾದ್ದಲ್ಲ. ಪ್ರಗತಿಪರವಾಗಿ ಯುವ ಸಮುದಾಯವನ್ನು ಕಟ್ಟದೇ ಹೋದರೆ ಏನೇನು ಯಡವಟ್ಟುಗಳಾಗಬೇಕೊ ಅವೆಲ್ಲವೂ ಆಗುತ್ತವೆ‌ ಎಂಬುದಕ್ಕೆ ನಮ್ಮ ದೇಶದ ಇಂದಿನ ಸ್ಥಿತಿ ತಾಜಾ ಉದಾಹರಣೆ. ರಾಜಕೀಯ ಪಕ್ಷಗಳು ಧರ್ಮಾಧಾರಿತವಾದಾಗ ಅವು ಮಂದಿರ ಮಸೀದಿ ಇಗರ್ಜಿ, ಮಠಗಳು, ಬಾಬಾಗಳು, ದೇವರು ದಿಂಡಿರುಗಳ ಕಡೆಗೇ ಯೋಚಿಸುತ್ತವೋ ಹೊರತು ಒಂದು ಸಶಕ್ತ ವೈಜ್ಞಾನಿಕ ವೈಚಾರಿಕ ಸಮಾಜವನ್ನು ದೇಶವನ್ನು ಕಟ್ಟಲು ಅವುಗಳಿಂದ ಸಾಧ್ಯವಿಲ್ಲ‌. ಅದರ ಪ್ರತಿಫಲವೇ ಇಂದು ಭಾರತ ಎದುರಿಸುತ್ತಿರುವ ಕೋವಿಡ್-19 ಸಮಸ್ಯೆ. ಇದು ಒಂದು ಉದಾಹರಣೆಯಷ್ಟೆ. ಭಾರತದ ದಾರಿದ್ರ್ಯದ ಹಿಂದೆ ಇರುವುದೂ ಈ ವಿಚಾರಗಳೇ. ಈ ದೇಶದಲ್ಲಿ ಮಂದಿರ ಮಸೀದಿಗಾಗಿ ನಡೆದ ಮೆರವಣಿಗೆ, ಹೊಡೆದಾಟ, ವಾಗ್ವಾದ, ವಿಮರ್ಶೆ, ಊರು, ದೇಶ, ರಾಜ್ಯಗಳ ಬಂದ್ ಗಳು, ಸಮಾವೇಷಗಳು, ಬೈಟಕ್ ಗಳು, ರ್ಯಾಲಿಗಳು, ಭಾಷಣಗಳು, ಚುನಾವಣಾ ಪ್ರಣಾಳಿಕೆಗಳು, ಘೋಷಣೆಗಳು, ಶಂಕನಾದಗಳು, ರಥ ಯಾತ್ರೆಗಳು, ರಸ್ತೆ ತಡೆಗಳು, ಬಯ್ಕಾಟುಗಳು, ಆರೋಗ್ಯ ಶಿಕ್ಷಣ, ಸದೃಢ ಆರೋಗ್ಯ ವ್ಯವಸ್ಥೆ, ಆಸ್ಪತ್ರೆಗಳ ನಿರ್ಮಾಣ, ಸಂಶೋಧನೆಗಳು, ಪ್ರಯೋಗಾಯಲಗಳು, ಹೊಸಹೊಸ ವೈದ್ಯಕೀಯ ಆವಿಷ್ಕಾರಗಳು, ಔಷಧ, ಅಂಬ್ಯುಲೆನ್ಸ್, ಸಿಬ್ಬಂಧಿ ನೇಮಕಾತಿ ಮೊದಲಾದ ಮೂಲಭೂತ ಸೌಕರ್ಯಗಳು, ಶಿಕ್ಷಣ ಮೊದಲಾದವಕ್ಕಾಗಿ ನೆಡೆದಿದ್ದರೆ ಇಂದು ಭಾರತ ಅತ್ಯಂತ ಮುಂದುವರೆದ ದೇಶಗಳೆನಿಸಿಕೊಳ್ಳುತ್ತಿರು ಯಾವುದೇ ರಾಷ್ಟ್ರಗಳಿಗಿಂತ ಉನ್ನತ ಸ್ಥಿತಿಯಲ್ಲಿರುತ್ತಿತ್ತು. ಚಿಕಿತ್ಸೆ ಸಿಗದೆ, ಅನ್ನ ಸಿಗದೆ, ಆಶ್ರಯ ಸಿಗದೆ ಜನರು ಗುಳೇ ಹೋಗುವ, ಬೀದಿ ಬೀದಿಯಲ್ಲಿ ಬಿದ್ದು ಸಾಯುವ ಸ್ಥಿತಿ ಬರುತ್ತಿರಲಿಲ್ಲ. ಕೋವಿಡ್ – 19ರ ಈ ತುರ್ತು ಪರಿಸ್ಥಿತಿಯಲ್ಲಿ ಮಂದಿರ ಮಸೀದಿಗಳು ಜನರನ್ನು ರಕ್ಷಿಸಲಾರವು ಎಂಬುದನ್ನು ಈಗಲಾದರೂ ನಮ್ಮ ಯುವ ಸಮುದಾಯ ಅರ್ಥ ಮಾಡಿಕೊಳ್ಳಬೇಕು‌. ದಶಕಗಳಿಂದ ಯುವಕರನ್ನು ಧಾರ್ಮಿಕ ವಿಚಾರಗಳಿಗೆ ಪ್ರಚೋದಿಸಿ ಬಳಸಿಕೊಂಡದ್ದೇನಾದರೂ ಇಂದು ಉಪಯೋಗಕ್ಕೆ ಬರುತ್ತಿದೆಯೇ ಎಂಬುದನ್ನು ಆಲೋಚಿಸಬೇಕು. ಮನುಷ್ಯರ ಜೀವವನ್ನು ಉಳಿಸಲು, ರಕ್ಷಿಸಲು ಉಪಯೋಕ್ಕೆ ಬಾರದ ಮಂದಿರ – ಮಸೀದಿ ಧರ್ಮಗಳ ಗುಂಗಿನಿಂದ ಈಗಲಾದರೂ ಹೊರಬರಬೇಕು. ನಮ್ಮ ದೇಶ ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡುವ ಪ್ರಯತ್ನ ಮಾಡುತ್ತಿದೆ. ನಮಗೆ ಸರಿಯಾದ ಸುರಕ್ಷತಾ ವ್ಯವಸ್ಥೆಗಳು ಇಲ್ಲ ಎಂದು ವೈದ್ಯಕೀಯ ವಲಯದಿಂದ ಹತಾಷೆಯ ಕೂಗುಗಳು ಅಲ್ಲಲ್ಲಿ ಕೇಳಬರುತ್ತಿವೆ. ಯಾರನ್ನು ಯೋಧರು ಎಂದು ಈಗ ಪರಿಗಣಿಸಲಾಗಿದೆಯೋ ಅವರು ಚಿಕಿತ್ಸೆ ನೀಡಲು ಹೆದರುತ್ತಿದ್ದಾರೆ ಹಿಂಜರಿಯುತ್ತಿದ್ದಾರೆ. ಜನ ಭೀತಿಯಿಂದ ಕಂಗಾಲಾಗಿದ್ದಾರೆ. ಖಾಸಗೀ ಆಸ್ಪತ್ರೆಗಳು ಕೊರೋನಾ ರೋಗಿಗಳಿಗಾಗಿ ಬಿಲ್ ಬುಕ್ಕು ಹಿಡಿದು ರೆಡ್ ಕಾರ್ಪೆಟ್ ಹಾಸಿ ಕಾಯುತ್ತಿವೆ‌. ಸರ್ಕಾರಿ ವ್ಯವಸ್ಥೆ ವಿಫಲವಾಗಿದೆ, ಸೋತು ಕೈ ಚೆಲ್ಲವ ಹತಾಶ ಹಂತ ತಲುಪಿಯಾಗಿದೆ. ಇದೆಲ್ಲವೂ ಅವಿವೇಕದ ಅವೈಜ್ಞಾನಿಕ ಹಾಗೂ ಅವೈಚಾರಿಕ ವಿಚಾರಗಳಿಗೆ ಮನ್ನಣೆ ಕೊಟ್ಟದ್ದರ ಫಲ. ಭ್ರಷ್ಟಾಚಾರದ ಫಲ ಹಾಗೂ ಹೊಣೆಗೇಡಿತನದ, ಸ್ವಾರ್ಥದ ಫಲ. ಸರ್ಕಾರವೂ ವಿಫಲವಾಗಿದೆ. ಹಣವೂ ಇಲ್ಲ ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳೂ ಇಲ್ಲ. ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಕೂಗೂ ಎದ್ದಿದೆ. ಇದೇ ಸರಿಯಾದ ಹೊತ್ತು ಎಂದು ಕೊರೋನಾಕ್ಕೆ ಮದ್ದು ಕಂಡು ಹಿಡಿದಿರುವುದಾಗಿ ಸುಳ್ಳು ಪ್ರಚಾರ ಮಾಡಿ ಆ ಮೂಲಕ ಜನರ ಆರೋಗ್ಯದ ಜೊತೆ ಆತಂಕದ ಜೊತೆ ಚಲ್ಲಾಟವಾಡುತ್ತಾ ಅವರ ಮಾನಸಿಕ ದೌರ್ಬಲ್ಯವನ್ನೇ ಬಂಡವಾಳ ಮಾಡಿಕೊಂಡು ಕೋಟಿ ಕೋಟಿ ಹಣ ಲಪಟಾಯಿಸುವ ಔಷಧ ದಂಧೆ ಕೋರರು ಕುಣಿದಾಡುತ್ತಿದ್ದಾರೆ. ಹಾಗಿದ್ದರೂ ಆಳುವ ವ್ಯವಸ್ಥೆ ಅಂತವರ ಮೇಲೆ ಮೃದು ಧೋರಣೆಯನ್ನು ತಾಳಿದೆ. ಇದರ ವಿರುದ್ಧ ಯುವ ಸಮುದಾಯ ಜನತೆ ದಂಗೆ ಏಳುವುದಿಲ್ಲ ಎಂಬ ಖಾತ್ರಿ ಮೇಲಿನವರಿಗಿದೆ ಏಕೆಂದರೆ ಜನತೆಯನ್ನು ಹೇಗೆ ಭಾವನಾತ್ಮಕವಾಗಿ ವಂಚಿಸಿದ್ದೇವೆ ಅದು ಯಾವ ರೀತಿಯ ಕೆಲಸ ಮಾಡುತ್ತಿದೆ ಎಂಬ ಸತ್ಯ ಅವರಿಗೂ ಚನ್ನಾಗಿಯೇ ಗೊತ್ತಿದೆ. ಒಂದು ಸಂಸ್ಥೆಯಂತೂ ಈಗಾಗಲೇ ಕೋವಿಡ್ ಗೆ ತಾನು ಔಷಧ ಕಂಡು ಹಿಡಿದಿದ್ದು ಮುಂಬರು ಅಗಸ್ಟ್ ೧೫ ಕ್ಕೆ ಅದನ್ನು ಬಿಡುಗಡೆ ಮಾಡುವುದಾಗಿಯೂ ಘೋಷಿಸಿದೆ ಅದರ ವೈಜ್ಞಾನಿಕ ಸಾಧ್ಯಾಸಾಧ್ಯತೆಗಳ ವಿರುದ್ಧ  ದನಿ ಎದ್ದಾಗ ಎಚ್ಚೆತ್ತು ಮುಂಬರುವ ವರ್ಷಕ್ಕೆ ಔಷದ ಲಭ್ಯತೆಯ ಸಾಧ್ಯತೆಯನ್ನು ಮುಂದೂಡಿದೆ. ಯೋಗ ಗುರುವೊಬ್ಬರು ಕೆಮ್ಮು ಮತ್ತು ಜ್ವರಕ್ಕೆ ತಾನು ಔಷಧ ತಯಾರಿಸಿರುವುದಾಗಿ ಕೇಂದ್ರ ಆಯುಷ್ ಇಲಾಖೆಗೆ ಅನುಮತಿ ಕೋರಿ ಅರ್ಜಿ ಹಾಕಿ ಇತ್ತ ತಾನು ಕೊರೋನಾ ಜ್ವರಕ್ಕೆ ಕೊರೋನಿಲ್ ಎಂಬ ಔಷಧ ತಯಾರಿಸಿರುವುದಾಗಿ ದೊಡ್ಡ ಜಾಹಿರಾತು ನೀಡುವ ಮೂಲಕ ಲಾಭಿಗೆ ನಿತ್ತಿದೆ. ಆಯುಷ್ ಇಲಾಖೆ ನೋಟಿಸ್ ನೀಡಿದ್ದರೂ, ಬಾಬಾ ರಾಮದೇವ ಅವರ ಮೇಲೆ ಹಾಗೂ ಅವರ ಆಪ್ತರೊಬ್ಬರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿರುವುದಾಗಿ ಹೇಳುತ್ತಿದ್ದರೂ ಕೇಂದ್ರದ ಮಂತ್ರಿಗಳು ಮಾತ್ರ ವಿಶ್ವಾಸಾರ್ಹವಲ್ಲದ ಲಾಭದ ದಂಧೆಯಾಗಿರುವ ಇದನ್ನು ಸಮರ್ಥಿಸಿಕೊಳ್ಳುತ್ತಾರೆ‌. ಇದನ್ನೆಲ್ಲ ಹ್ಞೂ ಎನ್ನಲು ದೇಶದ ಮೂಲೆ ಮೂಲೆಯಲ್ಲಿ ಅಂಧಾಭಿಮಾನಿಗಳ ದೊಡ್ಡಪಡೆಯೂ ಅವರ ಬೆನ್ನಿಗೆ ಇದೆ. ಅಂತಿಮವಾಗಿ ಇದರ ಫಲಿತಾಂಶ ಪ್ರಜಾ ಸಮೂಹದ ಮೇಲೆಯೇ. ವೈಜ್ಞಾನಿಕ ಮನೋಭಾವವನ್ನು ದೇಶದ  ಯುವಕರಲ್ಲಿ ಸಮಸ್ತ ಪ್ರಜಾ ಸಮೂಹದಲ್ಲಿ ಬೆಳೆಸದೆ ಧಾರ್ಮಿಕ ಮನೋಭಾವವನ್ನು ಬಿತ್ತಿ ಬೆಳೆದಿದ್ದರ ಫಲ ಇಂದು ಕಣ್ಣೆದುರೇ ಕಾಣುತ್ತಿದೆ. ಬಾಲ್ಕನಿಗೆ ಬಂದು ಚಪ್ಪಾಳೆ ಹೊಡೆದೂ ಆಯಿತು, ಮನೆ ಮನೆಯಲ್ಲಿ ಹಣತೆ ಹಚ್ಚಿಯೂ ಆಯಿತು. ಬಾಲ್ಕನಿಗೆ ಬಂದು ಚಪ್ಪಾಳೆ ತಟ್ಟಿದರೆ ಊರೊಳಗೆ ನುಗ್ಗಿದ ಮಾರಿ ಹೆದರಿ ಓಡಿ ಹೋಗಲು ಅದೇನು ಗದ್ದೆಯ ಫಸಲಿಗೆ ಮುತ್ತಿದ ಹಕ್ಕಿಯ ಹಿಂಡೇ…? ಕೊನೆಗೆ ಇದೆಲ್ಲವನ್ನೂ ಮಾಡಲು ಹೇಳಿ ಮಾಡಿಸಿದ ಆಳುವ ನಾಯಕ ‘ಕೋವಿಡ್ ನೊಂದಿಗೆ ಜೀವಿಸುವುದ ಕಲಿಯಿರಿ’ ಎಂದುಬಿಟ್ಟ. ಇಂತಹ ಸ್ಥಿತಿ ನಿರ್ಮಾಣವಾಗುವುದು ದೌರ್ಬಲ್ಯದಿಂದ. ದೌರ್ಬಲ್ಯವು ಬರುವುದು ಮೌಢ್ಯ ಮತ್ತು ಮತೀಯ ಸೈದ್ಧಾಂತಿಕತೆಯನ್ನು ಬಿತ್ತಿ ವೈಜ್ಞಾನಿಕತೆಯನ್ನು ಉದಾಸೀನ ಮಾಡುವುದರಿಂದ. ಲಂಕೇಶ್ ಅಂದೇ ಹೇಳಿದ್ದರು ‘ಇಟ್ಟಿಗೆ ಪವಿತ್ರವಲ್ಲ ಜೀವ ಪವಿತ್ರ’ ಎಂದು. ಆ ಮಾತು ಈಗ ನೆನಪಾಗುತ್ತಿದೆ. ಪವಿತ್ರವಾದ ಜೀವಗಳನ್ನು ಉಳಿಸಲು ಈಗ ಯಾವ ಮಂದಿರ ಮಸೀದಿಗಳೂ ಆ ಕುರಿತ ರಾಜಕೀಯ ವಿಚಾರ ವಾಗ್ವಾದಗಳೂ ಬರುವುದಿಲ್ಲ ಹಾಗೂ ಸಶಕ್ತವಾಗಿಲ್ಲ. ಜಢ ಸಿದ್ಧಾಂತಗಳಿಂದ ಹೊರಬಂದು ನಾವೀಗ ಅವಲೋಕಿಸಬೇಕಾಗಿದೆ. ನಾವು ಮಾತ್ರವಲ್ಲ ನಮ್ಮನ್ನಾಳುವ ನಾಯಕರೂ… “ಓ ಬನ್ನಿ ಸೋದರರೆ ಬೇಗ ಬನ್ನಿ ಗುಡಿ ಚರ್ಚು  ಮಸಜೀದಿಗಳ ಬಿಟ್ಟು ಹೊರ ಬನ್ನಿ ಬಡತನವ ಬುಡಮಟ್ಟ ಕೀಳ ಬನ್ನಿ ಮೌಡ್ಯತೆಯ ಮಾರಿಯನು ಹೊರದೂಡಲೈ ತನ್ನಿ ವಿಜ್ಞಾನ ದೀವಿಗೆಯ ಹಿಡಿಯ ಬನ್ನಿ ಓ ಬನ್ನಿ ಸೋದರರೆ ಬೇಗ ಬನ್ನಿ……. ಸಿಲುಕದಿರಿ ಮತವೆಂಬ ಮೊಹದಜ್ಞಾನಕ್ಕೆ ಮತಿಯಿಂದ ದುಡುಯಿರೈ ಲೋಕ ಹಿತಕೆ ಆ ಮತದ ಈ ಮತದ ಹಳೆಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕ್ಕೆ ಓ ಬನ್ನಿ ಸೋದರರೇ ವಿಶ್ವ ಪಥಕೆ…..” ಎಂದು ಕವಿ ಕುವೆಂಪು ಸುಮ್ಮನೇ ಕರೆ ನೀಡಲಿಲ್ಲ. ದೇಶದ ಯುವಕರನ್ನು ಕುರಿತು ವಿವೇಕಾನಂದರು ಸುಮ್ಮಸುಮ್ಮನೇ ಕಂಠಶೋಷಣೆ ಮಾಡಿಕೊಂಡು ಕರೆನೀಡಲಿಲ್ಲ. ಅವರೆಲ್ಲರ ಧಾರ್ಮಿಕ ದೃಷ್ಟಿ ವೈಜ್ಞಾನಿಕತೆಯಿಂದ ಕೂಡಿತ್ತು. ದೇಶ ಮತ್ತು ಅದರ ಸಮಸ್ತ ಅಭಿವೃದ್ಧಿಯ ಕುರಿತು ಅವರ ದಾರ್ಶನಿಕತೆ ದೂರದೃಷ್ಟಿಯಿಂದ ಕೂಡಿತ್ತು. ಅದೆಂದೂ ಅವೈಜ್ಞಾನಿಕವೂ ಮತೀಯಾಂಧಕಾರಿಯೂ ಆಗಿರಲಿಲ್ಲ. ಅವರು ಬದುಕಿದ್ದ ಕಾಲದಲ್ಲೂ ಸಾಂಕ್ರಾಮಿಕ ರೋಗಗಳು ದೇಶವನ್ನು ನುಗ್ಗಿ ಜನರನ್ನು ಇನ್ನಿಲ್ಲದಂತೆ ಬಾದಿಸಿದ್ದವು. ದೇಶದ ವಿಜ್ಞಾನಿಗಳು ಆಗ ಔಷಧ ಶೋಧದಲ್ಲಿ ತೊಡಗಿದರು. ಸರ್ಕಾರಗಳು ನೈಜ ಕಾಳಜಿಯಿಂದ ಕೆಲಸ ಮಾಡಿದವು. ಭಾರತವೇ ಕ್ಷಯ ರೋಗಕ್ಕೆ, ರೇಬಿಸ್ಸಿಗೆ, ಪ್ಲೇಗ್, ಕಾಲರಾ, ಪೋಲಿಯೋ ಮೊದಲಾದ ಖಾಯಿಲೆಗಳಿಗೆ ಮದ್ದು ಅರೆಯಿತು. ಇದು ಸಾಧ್ಯವಾದದ್ದು ವಿಜ್ಞಾನಕ್ಕೆ ನೀಡಿದೆ ಒತ್ತಿನಿಂದ ಪ್ರಾಮುಖ್ಯತೆಯಿಂದ. ಇಂದು ಭಾರತ ಮೇಲ್ಕಂಡ ಕಾಯಿಲೆಗಳನ್ನು ಯಶಸ್ವಿಯಾಗಿ ಎದುರಿಸಿದೆ. ಈಗ ಬಂದಿರುವ ಕೊರೋನಾ ಹಾಗೆ ನೋಡಿದರೆ ಹಿಂದಿನ ವಿನಾಶಕಾರಿ ಸಾಂಕ್ರಾಮಿಕಗಳ ಸ್ವರೂಪದ್ದಲ್ಲ ‘ಹುಲಿಗಿಂತ ಹುಲಿಯ ಬಣ್ಣನೆಯೇ ಹೆದರಿಸಿತ್ತು’ ಎಂಬ ಗಾದೆ ಮಾತಿನಂತೆ ಕೊರೋನಾಕ್ಕಿಂತ ಅದರ ಬಗೆಗಿನ ವರ್ಣನೆಗಳು, ಭಯಾನಕ ಸುದ್ಧಿಗಳು ಎಬ್ಬಿಸುವ ಬೊಬ್ಬೆಯೇ ಇಂದು ಭಯಾನಕತೆಯನ್ನು ಸೃಷ್ಟಿಸಿದೆ. ಇಲ್ಲಿಯೂ ಆಳುವ ವ್ಯವಸ್ಥೆ ಕೋಮು ರಾಜಕೀಯವನ್ನೇನೂ ಬಿಡಲಿಲ್ಲ. ಮಾದ್ಯಮಗಳು ಮುಸ್ಲಿಮ್ ತಬ್ಲಿಘಿಗಳನ್ನು  ಕೊರೋನಾ ಪ್ರಸಾರಕರು ಎಂಬಂತೆ ಬಿಂಬಿಸಿದವು. ಹಳ್ಳಿಹಳ್ಳಿಗಳಲ್ಲಿ ಡಂಗುರ ಹೊಡೆಸಿದರು, ಸಣ್ಣಪುಟ್ಟ ಬಡ ವ್ಯಾಪಾರಿಗಳನ್ನು ಹೆದರಿಸಿ ಗದರಿಸಿ ಹೊಡೆದು ಬಡಿದು ಓಡಿಸಿದರು. ಎಸ್ಟೋ ಬಡವರು ಮನೆ ಹೊಟ್ಟೆಗಿಲ್ಲದೆ ನರಳುವ ಸ್ಥಿತಿ ಸೃಷ್ಟಿ ಮಾಡಿದರು. ಕೊರೋನಾದ ಹೆಸರಲ್ಲಿ ಒಂದು ಸಮುದಾಯವನ್ನು ಅಸ್ಪೃಷ್ಯರನ್ನಾಗಿಸುವ, ಪರಕೀಯರರನ್ನಾಗಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿ ಮುಗಿಸಿದರು. ಇದು ಧಾರ್ಮಿಕ ಮನೋಭಾವ ಎಂಥಹಾ ಅಮಾನವೀಯ ಮನಸ್ಥಿತಿಗಳನ್ನು ಪರಿಸ್ಥಿತಿಗಳನ್ನು ಸೃಷ್ಟಿಸಬಲ್ಲದು ಎಂಬುದಕ್ಕೆ ಉದಾಹರಣೆ. ಈಗಾಗಲೇ ದ್ವೇಷದ ಮೂಟೆಗಳಾಗಿರುವ ಯುವ ಸಮುದಾಯ ಒಂದು ನಿರ್ದಿಷ್ಟ ಸಮುದಾಯದ ಮೇಲೆ ಕೃದ್ಧರಾಗಿ ಕುದಿಯುವಂತಾಯಿತು. ಸಾಂಕ್ರಾಮಿಕ ರೋಗದಲ್ಲೂ ಧರ್ಮದ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರದ ಫಸಲು ತೆಗೆಯುವ ಕೃಷಿಯನ್ನು ಭಲೆ ನಾಜೂಕಿನಿಂದ ನಿರ್ವಹಿಸಲಾಯಿತು. ಕೋಟ್ಯಾಂತರ ಕಾರ್ಮಿಕರು ಅನ್ನ ಆಶ್ರಯವಿಲ್ಲದೆ ಗುಳೇ ಹೊರಟು ಹಾದಿಬೀದಿಯಲ್ಲಿ ಬಿದ್ದು ಸತ್ತದ್ದು ಲೆಕ್ಕಕ್ಕಿಲ್ಲವಾಯಿತು.‌ ದೇಶ ಕಟ್ಟಿದವರು ಸೋಂಕಿತರಾದರು ದೇಶ ದೋಚಿದವರು ತಮ್ಮ ಬಹು ಮಹಡಿಯ ಕಟ್ಟಡಗಳಲ್ಲಿ ಸುರಕ್ಷಿತರಾದರು. ಒಟ್ಟಿನಲ್ಲಿ ಅವಿವೇಕದ ಪರಮಾವಧಿ, ಅಲಕ್ಷ್ಯ, ಬಡವರು ದುಡಿಯುವ ವರ್ಗದ ಬಗೆಗಿನ ಅಸಡ್ಡೆ ತಿರಸ್ಕಾರ ಮನೋಭಾವಗಳು ಈ ದೇಶದಲ್ಲಿ ಕಾಯಿಲೆ ವ್ಯಾಪಕವಾಗಿ ಹಬ್ಬಲು ಕಾರಣವಾದವು. ವಿಶ್ವ ಆರೋಗ್ಯ ಸಂಸ್ಥೆಯು ಭಾರತದಂತಹಾ ದೇಶದಲ್ಲಿ ಸೋಂಕು ಸಮುದಾಯದ ಹಂತವನ್ನು ತಲುಪಿದರೆ ಏನು ಅನಾಹುತ ಆಗಬಹುದು ಎಂದು ಎಚ್ಚರಿಸಿತ್ತೋ ಅದು ನಮಗೆ ಎಚ್ಚರವಾದಂತೆ ಕಾಣಲಿಲ್ಲ. ನಾವು ಯಾವುದನ್ನು ಪ್ರಶ್ನಿಸಬೇಕೊ ಅದನ್ನು ಪ್ರಶ್ನಿಸಲಿಲ್ಲ ಯಾವುದನ್ನು ಬೆಂಬಲಿಸ ಬಾರದೊ ಯಾವುದನ್ನು ಒಪ್ಪ ಬಾರದೊ‌ ಯಾವುದನ್ನು ಹಿಂಬಾಲಿಸಬಾರದೋ ಅವುಗಳನ್ನು ಬೆಂಬಲಿಸಿದ್ದರ ಹಿಂಬಾಲಿಸಿದ್ದರ ಒಪ್ಪಿದ್ದರ ಫಲವನ್ನೀಗ ಉಣ್ಣುತ್ತಿದ್ದೇವೆ. ದಶಕಗಳಿಂದ ಧರ್ಮದ ನಿದ್ದೆ ಗುಳಿಗೆ ನುಂಗಿ ಮತ್ತೇರಿ ನಿಶೆಯೊಳಗೆ ನಿದ್ದೆಹೋದದ್ದರ ಫಲ ಇಂದು ಅಸಹಾಯಕ ಸ್ಥಿತಿಗೆ ಸೃಷ್ಟಿಯಾಗುವಂತೆ ಮಾಡಿದೆ. ಇನ್ನಾದರೂ ಈ ಅವಿಚಾರಗಳಿಂದ ಹೊರ ಬಂದು ಪ್ರಗತಿಪರವಾಗಿ ಯೋಚಿಸುವುದನ್ನು ಕಲಿಯಬೇಕು ವೈಜ್ಞಾನಿಕ ಮನೋಧರ್ಮವನ್ನು ರೂಢಿಸಿಕೊಳ್ಳುವ ಮೂಲಕ ಧರ್ಮ ದೇವರು ಜಾತಿಗಳೆಂಬ ಶ್ರೇಷ್ಟತೆಯ ವ್ಯಸನಗಳಿಂದ ಹೊರಬಂದು ದೇಶವನ್ನು ಆಂತರಿಕವಾಗಿ ಬಲಪಡಿಸಬೇಕು. ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುಸಿದರೆ ಅಂತಹಾ ದೇಶಕ್ಕೆ ಯಾವತ್ತಿಗೂ ಭವಿಷ್ಯವಿಲ್ಲ. ಧರ್ಮದ ಅಂಧಾಕಾರದ ತಳಹದಿಯ ಮೇಲೆ ದೇಶ ಕಟ್ಟಲು ಹೊರಟರೆ ಅಂತಹಾ ದೇಶ ಎಂದಿಗೂ ಸದೃಢ ದೇಶವಾಗಲಾರದು. *******************

ಕೋವಿಡ್-19,ಆತ್ಮಾವಲೋಕನ Read Post »

ಇತರೆ, ಜೀವನ

ಪ್ರಸ್ತುತ

ಗುರು-ಶಿಷ್ಯ ಸಂಬಂದ ಪ್ರಜ್ಞಾ ಮತ್ತಿಹಳ್ಳಿ ಕೇವಲ ತರಗತಿಯ ನಾಕು ಗೋಡೆಗಳ ನಡುವೆ ವೇಳಾಪಟ್ಟಿಯ ಚೌಕಗಳ ಮಧ್ಯದಲ್ಲಿ ಸಿಲೆಬಸ್ ಎಂಬ ಅಕ್ಷರದ ಅಂಗಡಿ ಇಟ್ಟುಕೊಂಡ ಇವತ್ತಿನ ಗುರು, ಅಕ್ವೇರಿಯಂನ ಮೀನಿನಂತೆ ಅಸಹಾಯಕನಾಗಿದ್ದಾನೆ. ಅವನಿಗೆ ಸಮಯಮಿತಿ ಹಾಗೂ ವಿಷಯಮಿತಿ. ದಿನಕ್ಕೊಂದೊಂದೇ ಗುಳಿಗೆ ಆಹಾರ ನುಂಗಿ ಗಾಜಿನ ಗೋಡೆಗೆ ಮೂತಿ ಗುದ್ದುತ್ತ ಬುಳುಕ್ ಬುಳುಕ್ ಮುಳುಗುತ್ತಿದ್ದಾನೆ.  ಗುರು-ಶಿಷ್ಯರು ಈ ಚರಾಚರದ ಎಲ್ಲ ಎಲ್ಲೆಗಳನ್ನು ಮೀರಿ ಬೆಳೆಯಬಲ್ಲ ಸಂಬಂಧವನ್ನು ಹೊಂದಿರುತ್ತಾರೆ. ತರಗತಿಯ ಕರಿಹಲಗೆಯ ಮೇಲೆ ಬಿಳಿ ಸೀಮೆ ಸುಣ್ಣಕ್ಕೆ ನೋವಾಗದಂತೆ ಭೂಮಿಯ ಚಿತ್ರ ತೆಗೆಯುವವನು ಗುರುವೇ. ತನ್ನ ಜ್ಞಾನದ ಕಿರಣಗಳಿಂದ ಶಿಷ್ಯನ ಚಿತ್ತಬಿತ್ತಿಯ ಮೇಲೆ ಆಕಾಶಗಂಗೆಯ ಹಾಲುಹಾದಿ ತೆರೆಯುವವನೂ ಗುರುವೇ. ಹಾಗಾಗಿ ಗುರು-ಶಿಷ್ಯರ ಸಂಬಂಧ ಎನ್ನುವುದು ಯಾವುದೇ ಗೋಡೆ,ಛಾವಣಿಗಳ ಹಂಗಿಲ್ಲದ ಮಂದಿರದಂತೆ. ಕೊಡುವ ಗುರುವಿನ ಅಂತ:ಸತ್ವದ ಅಗಾಧತೆ ಹಾಗೂ ತೆಗೆದುಕೊಳ್ಳುವ ಶಿಷ್ಯನ ಧಾರಣ ಶಕ್ತಿಗಳನ್ನು ಅವಲಂಬಿಸಿ ಈ ಸಂಬಂಧದ ವ್ಯಾಖ್ಯೆ ಬದಲಾಗುತ್ತದೆ. ಮಮತೆ ಕರುಣೆಗಳ ವಾರಿಧಿಯಂಥ ಗುರು ಸಾಕ್ಷಾತ ಅಮ್ಮನಾಗುತ್ತಾನೆ. ಅವನ ಮಡಿಲಲ್ಲಿ ಶಿಶುವಾಗುವ ಶಿಷ್ಯ ವಾತ್ಸಲ್ಯದ ಗುಟುಕು ಗುಟುಕರಿಸಿ ಅಮೃತಂಗಮಯನಾಗುತ್ತಾನೆ. ಜ್ಞಾನದ ದಾಹದ ಶಿಷ್ಯ ರೋಗಿಯಂತೆ ನರಳುವಾಗ ಗುರು ವೈದ್ಯನಾಗಿ ಸಲಹುತ್ತಾನೆ. ಸಮಾನ ಮನಸ್ಕ-ಸಮಾನ ಆಸಕ್ತ ವಿಷಯಗಳಲ್ಲಿ ಅವರಿಬ್ಬರೂ ಸ್ನೇಹಿತರೇ ಆಗಿಬಿಡುತ್ತಾರೆ. ಆಧ್ಯಾತ್ಮ ಹಾಗೂ ಸಂಗೀತಗಳಲ್ಲಿ ಗುರು ಶಿಷ್ಯರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಸಂಗತಿಗಳಿಗೆ ಎಣೆಯಾಗಲೀ, ಎಣಿಕೆಯಾಗಲಿ, ಎಲ್ಲೆಯಾಗಲೀ ಇಲ್ಲವೇ ಇಲ್ಲ. ರಾಗದ ದಾರಿಯಲ್ಲಿ ಸಾಗುತ್ತ ಸಾಗುತ್ತ ಅವರು ಅಮರರಾಗುತ್ತಾರೆ ನಾದದ ಸಾಧನೆಯಲ್ಲಿ ಲೀನವಾಗುತ್ತ, ಲೀನವಾಗುತ್ತ ಈ ಲೋಕದ ಸೀಮೆಗಳನ್ನು ದಾಟುತ್ತಾರೆ. ಅಲೌಕಿಕವನ್ನು ಅರಸುತ್ತ, ಅರಸುತ್ತ ಪರಸ್ಪರರಿಗೆ ದಾರಿಯಾಗಿ ತೆರೆದುಕೊಳ್ಳುತ್ತಾರೆ.  ಗುರು-ಶಿಷ್ಯಂದಿರು ಪರಸ್ಪರರನ್ನು ಬೆಳೆಸಬಲ್ಲರು. ಶಿಷ್ಯನ ಇಲ್ಲಗಳನ್ನು ತುಂಬುವುದಕ್ಕಾಗಿ ಗುರು ತಾನು ಮೊದಲು ತುಂಬಿಕೊಳ್ಳುತ್ತಾನೆ. ಹೀಗೆ ಇಬ್ಬರೂ ಬೆಳೆಯುತ್ತಾರೆ. ನಿಜವಾದ ಗುರು “ಮಲಗಿ ಪರಮಾದರದಿ ಕೇಳಲು ಕುಳಿತು ಕಲಿಸುವ, ಕುಳಿತು ಕೇಳಲು ನಿಲುವ, ನಿಂತು ಕೇಳಿದರೆ ನಲಿದು ಕಲಿಸುವ” ಉತ್ಸಾಹಿಯಾಗಿರುತ್ತಾನೆ. ಗುರು-ಶಿಷ್ಯರ ನಡುವೆ ಜಾತಿ-ಲಿಂಗ-ವಯಸ್ಸು-ಹಣ ಗಳ ಅಂತರ ಬರುವುದಿಲ್ಲ. ಆಸಕ್ತಿ ಶ್ರದ್ದೆ ಅರಿವಿನ ಎಚ್ಚರಗಳು ಮಾತ್ರ ಪರಿಗಣಿಸಲ್ಪಡುತ್ತವೆ. ಗುರು-ಶಿಷ್ಯರ ಸಂಬಂಧ ಮನುಕುಲದ ಎಲ್ಲ ಸಂಬಂಧಗಳಿಂದಲೂ ಒಂದೊಂದು ರಂಗು ಪಡೆದು ಅರಳುವ ಕಾಮನಬಿಲ್ಲಿನ ಹಾಗೆ. ಅರಳುತ್ತರಳುತ್ತಲೇ ಹಗುರಾಗಿ ಹಂಗು ಕಳಚಿ ಮೇಲೆ ಹಾರುವ ಸ್ವರ್ಗೀಯ ಕುಸುಮದ ಹಾಗೆ. ಅಲ್ಲಮ-ಗುಹೇಶ್ವರ, ಸಂತ ಶಿಶುನಾಳ ಶರೀಫ-ಗೋವಿಂದಭಟ್ಟರು ವಿವೇಕಾನಂದ-ಪರಮಹಂಸರು, ಬುದ್ದ ಮತ್ತವನ ಅಸಂಖ್ಯಾತ ಶಿಷ್ಯರು ಸಾವಿರ ಸಾವಿರ ಮಾದರಿಗಳನ್ನು ಬಿಟ್ಟು ಹೋಗಿದ್ದಾರೆ. ಭಾರತೀಯ ಗುರು ಏನೂ ಆಗಬಲ್ಲ ಎಂದು ಜಗತ್ತಿಗೆ ತೋರಿಸಿದ್ದೇವೆ. ಆದರೂ ಕಲ್ಲು ಗೋಡೆಯ ಪಡಕಿನಲ್ಲಿ ಘಿಲ್ಲನೆ ಅರಳುವ ಗರಿಕೆಯ ಹಾಗೆ ಅಲ್ಲೊಂದು ಇಲ್ಲೊಂದು ಪುಟಾಣಿ ಅನುಬಂಧಗಳು ಪಿಳಿ ಪಿಳಿ ನಗುತ್ತವೆ. ಕ್ರೀಡಾ ಜಗತ್ತಿನಲ್ಲಿ ಅನೇಕ ಗುರುಗಳುತಮ್ಮ ಶಿಷ್ಯರನ್ನು ತಾರೆಗಳಾಗಿ ಬೆಳೆಸಿದ ಉದಾಹರಣೆಗಳಿವೆ. ಅನೇಕ ತಾರೆಗಳು ಬಾನೇರಿ ಜಗಮಗಿಸುವಾಗ ಗುರು ನೇಪಥ್ಯದ ಕತ್ತಲಲ್ಲೇ ಮುಳುಗಿರಲೂಬಹುದು. ಪತ್ರಿಕಾರಂಗದಲ್ಲೂ ಅನೇಕರು ಉತ್ತಮ ಶಿಷ್ಯರನ್ನು ಬೆಳೆಸಿದ್ದಾರೆ. ಕೆಲವರು ತಾವು ತಮ್ಮನ್ನು ಗುರುವಾಗಿ ಗುರುತಿಸದಿದ್ದರೂ ಅವರ ಬದುಕನ್ನು ಸಮೀಪದಿಂದ ಕಂಡವರು ಆಂತರ್ಯದ  ಶಿಷ್ಯತ್ವದಿಂದ ಅವರಿಂದ ಕಲಿತು ಬೆಳೆದಿದ್ದಾರೆ.  ಕಲಿಯುವ ಹಂಬಲವುಳ್ಳ ಮನುಜನಿಗೆ ಕಲಿಸುವ ಸಂಗತಿಗಳೆಲ್ಲ ಗುರುವೇ. ನದಿ-ನದ-ಬಾನು-ಬಯಲು-ಹೂ-ದುಂಬಿ-ಸಾಗರ-ಚುಕ್ಕಿ-ಚಂದ್ರಮರೆಲ್ಲ ಹಲವು ಸಂಗತಿಗಳನ್ನು ಕಲಿಸುತ್ತಲೇ ಇದ್ದಾವೆ. ಪ್ರಕ್ರತಿಯಂತಹ ದೊಡ್ಡ ಗುರು ಇನ್ನೊಂದಿಲ್ಲ. ಬಡವನಿಗೆ ಅವನ ಹಸಿವೇ ಗುರು. ದರಿದ್ರನಿಗೆ ಅವನ ಕೊರತೆಯೇ ಗುರು. ದೀನನಿಗೆ ಅವನ ನೋವೇ ಗುರು. ಹುಟ್ಟಿನಿಂದ ಚಟ್ಟದ ತನಕ ನಾವು ಕಾಣುವ ಸಂಗತಿಗಳೆಲ್ಲ ನಮಗೆ ಗುರುವಾಗಬಲ್ಲವು. ಕಲಿಯುವ ವಿಧೇಯತೆ ನಮಗಿದ್ದರೆ ಮಾತ್ರ.  ತರಣಿ ದರ್ಶನಕ್ಕಿಂತ ಕಿರಣಾನುಭವ ಸುಲಭ  ಪರಮ ಶಾಸ್ತ್ರಕ್ಕಿಂತ ಸರಿಯುದಾಹರಣೆ  ಪರಮ ತತ್ವವ ಕಂಡ ಗುರುವನರಸುವುದೆಲ್ಲಿ?  ದೊರೆತಂದು ನೀಂ ಧನ್ಯ-ಮಂಕುತಿಮ್ಮ  ಸೂರ್ಯನನ್ನು ನೋಡುವುದಕ್ಕಿಂತ ಅವನ ಕಿರಣಗಳನ್ನು ಅನುಭವಿಸುವುದು ಸುಲಭವಾದದ್ದು. ಶ್ರೇಷ್ಠ ಶಾಸ್ತ್ರಗಳನ್ನು ತಿಳಿದುಕೊಳ್ಳುವುದಕ್ಕಿಂತ ಒ೦ದು ಉದಾಹರಣೆಯನ್ನು ಅರಿಯುವುದು ಸುಲಭ. ಆದರೆ ಪರಮ ತತ್ವವನ್ನು ಕಂಡಿರುವ ಗುರುವನ್ನು ಹುಡುಕುವುದು ಕಷ್ಟ. ಅಂತಹ ಗುರು ಸಿಕ್ಕ ದಿನ ನೀನು-ನಾವು ಎಲ್ಲರೂ ಧನ್ಯರು. ಹೀಗೆ ಕತ್ತಲೆಯಿಂದ ಬೆಳಕಿನ ಕಡೆಗೆ ಅಸತ್ಯದಿಂದ ಸತ್ಯದ ಕಡೆಗೆ ಸಾಗುತ್ತಿರುವ ಈ ಪ್ರಯಾಣ ಕೇವಲ ಒಬ್ಬ ಗುರುವಿನಿಂದ ಮುಗಿಯುವುದಿಲ್ಲ. ನಾವೆಲ್ಲರೂ ನಮಗೆಲ್ಲರಿಗೂ ಕಲಿಸುತ್ತ ಕಲಿಯುತ್ತ ಸಾಗುವುದೇ ಬದುಕು. *****************************  

ಪ್ರಸ್ತುತ Read Post »

ಇತರೆ, ಜೀವನ

ಲಹರಿ

ಹಾಡುಗಳು ಹೀಗೆ…. ಜಿ.ಲೋಕೇಶ್ ಈ ಬದುಕಿನ ಒತ್ತಡಗಳನ್ನು ನಿಭಾಯಿಸುವವರು ತಾವು ಅದರಿಂದ ಮುಕ್ತರಾಗಲು ತಾವು ತಾವಾಗಿಯೇ ಇರಲು ಹಲವು ದಾರಿಗಳನ್ನು ಕಂಡುಕೊಳ್ಳುತ್ತಾರೆ.ಅದರಲ್ಲಿ ಸಂಗೀತವಂತು ಮನಸ್ಸಿಗೆ ಹಬ್ಬ ನೀಡುವ ಬೆಳಕು.ಹಾಡುಗಳನ್ನು ಗುನುಗುತ್ತಾ ಅವುಗಳೊಡನೆ ದಿನ ದೂಡುವ ಎಷ್ಟೋ ಮನಸ್ಸುಗಳಿವೆ. ಕೆಲವು ಹಾಡುಗಳಂತು ಎಷ್ಟು ಕಾಡುತ್ತವೆ ಅಂದರೆ ಬಹುಶಃ ಅವು ನಮ್ಮ ಬದುಕಿನುದ್ದಕ್ಕೂ ಜೊತೆಗೆ ಇದ್ದು ಬಿಡುತ್ತವೆ.ನಮ್ಮೊಂದಿಗೆ, ನಮ್ಮೊಡನೆ,ನಮ್ಮ ಜೀವನದ ಘಟನೆಗಳೊಡನೆ ತಳಕು ಹಾಕಿಕೊಂಡಿರುತ್ತವೆ.ಅದರಲ್ಲಿ ಪ್ರೇಮಿಗಳಿಗಂತು ಹಾಡುಗಳು ವರದಾನ. ಅಂತಹ ಪ್ರೇಮಿ ಹೀಗೆ ತನ್ನ ಜೀವನವನ್ನು ತನ್ನ ಪ್ರಿಯತಮೆಗಾಗಿ ಮೀಸಲಿಡಬಹುದು. “ತೇರೆ ಮೇರೆ ಸಪ್ನೆಅಬ್ ಏಕ್ ರಂಗ್ ಹೈ!”ವಾಹ್ ಎಂತಹ ಅದ್ಭುತ ಸಾಲುಗಳು ಅವಳ ಕನಸುಗಳು, ಇವನ ಕನಸುಗಳು ಒಂದೇ ಬಣ್ಣದಲ್ಲಿವೆ. ಸಾಕಲ್ಲವೇ?ಮನಸ್ಸಿಗೆ ಇನ್ನೇನು ಬೇಕು? ಸರ್ವ ಋತುವು ವಸಂತವೇ, ಚಿಗುರೆಲೆಯ ಘಮಲೇ!” “ದೂರ ಬೆಟ್ಟದಲ್ಲಿ ಒಂದು ಮನೆಯಿರಬೇಕು,ಮನೆಯ ಸುತ್ತ ಹೂವ ರಾಶಿ ಹಾಸಿರಬೇಕು”ಈ ಹಾಡಿನ ಸಾಲುಗಳು ಅವನು ಅವಳು ಕಂಡ ಕನಸುಗಳನ್ನು ಪ್ರತಿ ಕ್ಷಣವನ್ನು ನೆನಪಿಸುತ್ತಿರುತ್ತದೆ .ಅವರದೇ ಕನಸಿನ ಮನೆಯನ್ನು ಈ ಸಮಾಜದ ಗೊಡವೆಯೇ ಇರದ ದೂರದ ಬೆಟ್ಟದಲ್ಲಿ ಮನೆ ನಿರ್ಮಿಸಿ ಹಾಸಿ ಹೊದಿಯಲು ಕನಸುಗಳು. ಇವನಿಗೆ ಅವಳು, ಅವಳಿಗೆ ಇವನು .ಹಾಸಿ ಹೊದಿಯಲು ಕನಸುಗಳು. ಮುದಿತನದ ದಿನಗಳವರೆಗೂ ಇಬ್ಬರೇ! ಮಕ್ಕಳು ಬೇಡವೇ ಎನ್ನುತ್ತಾಳೆ ಅವಳು ಹಾಡುಗಳನ್ನು ಕೇಳಿ, ಕೇಳಿ ಇವನೆ ಒಂದು ಸಾಲು ಹೇಳುತ್ತಾನೆ “ಮಗುವಿನಂತೆ ನೀನಿರಲುಮಕ್ಕಳು ಬೇಕೆ? ಜೊತೆಗಿರಲು”ಮನೆಯ ಸುತ್ತಲೂ ಹೂವು ರಾಶಿ ಹಾಸಿಕೊಂಡು ದಿನವು ಇವರನ್ನು ನೋಡಿ ನಗುತಿರಬೇಕು. ಮನೆಯ ಮುಂದೆ ಹೊಂಡ ನಿರ್ಮಿಸಿ ಅದರಲ್ಲಿ ಕಮಲದ ಹೂಗಳು ಬಾತುಕೋಳಿಗಳು ಒಂದಷ್ಟು ವಿವಿಧ ಜಾತಿಯ ಹಕ್ಕಿಗಳು. ಹೊಸ ಪ್ರಪಂಚವನ್ನೇ ನಿರ್ಮಾಣ ಮಾಡಿ ಬದುಕು ಸಾಗಬೇಕು.ಆಕಸ್ಮಾತ್ ಅವಳಿಗೆ ನೋವಾದರೆ ಹೇಳುತ್ತಾನೆ “ನೀನ್ಯಾತಕೆ ಬಾಡುವೆ ಸೊರಗಿನಾನಿಲ್ಲವೇ ಆಸರೆಯಾಗಿ”ಅವಳನ್ನು ತೊಡೆಯ ಮೇಲೆ ಇರಿಸಿ ತಲೆ ನೇವರಿಸುತ್ತಾ ಕಂಗಳ ಹನಿಗಳನ್ನು ತಡೆಯುವನು ಕೊನೆಗೆ ಅವಳ ಅನುಪಸ್ಥಿತಿ ಕಾಡಿ ಹೇಳುತ್ತಾನೆ “ಬರೆದೆ ನೀನು ನಿನ್ನ ಹೆಸರ ನನ್ನ ಬಾಳ ಪುಟದಿಅದರ ಮಧುರ ಸ್ಮೃತಿಯ ನಾನುಹೇಗೆ ತಾನೇ ಮರೆಯಲಿ.”ಎಂದು ನೋವು ತಡೆದು ಪ್ರತಿದಿನವೂ ಬದುಕು ದೂಡುತ್ತಾನೆ. ಅವನ ಬದುಕಿನ ಪುಟವು ಕೊನೆಯಾಗ ಬಂದಾಗ “ಒಲವೇ ಜೀವನ ಸಾಕ್ಷಾತ್ಕಾರಒಲವೇ ಮರೆಯದ ಮಮಕಾರ.”ಎಂದು ಜಗವು ಇವರ ರೀತಿಯ ಪ್ರೀತಿ ಕಂಡಿಲ್ಲದಂತೆ ಅಮರವಾಗಿಸುತ್ತಾನೆಕೊನೆಗೆ ಒಂದು ಉಯಿಲು ಬರೆದಿಡುತ್ತಾನೆ. ದಿನವೂ ನಮ್ಮ ಸಮಾಧಿಯ ಮುಂದೆ ಹೂಗಳು ನಲಿಯುತ್ತಿರಲಿ. ನಮ್ಮ ಕನಸುಗಳು ಮುಂದುವರಿಯಲು ಮತ್ತೊಂದು ಜೀವಾತ್ಮಗಳು ಮನೆಯನ್ನು ಸಿಂಗರಿಸಲಿಅವರ ಬೆಳಗುಗಳು ಮತ್ತಷ್ಟು ಹೊಸ ಹಾಡುಗಳೊಂದಿಗೆ ಪ್ರಾರಂಭವಾಗಲಿ ಎಂದು! ************* ಜಿ.ಲೋಕೇಶಶಿಕ್ಷಕರುಸ.ಹಿರಿಯ ಪ್ರಾಥಮಿಕ ಶಾಲೆ ಮೈಲಾಪುರಚಿಂತಾಮಣಿ ತಾಲೂಕುಚಿಕ್ಕಬಳ್ಳಾಪುರ ಜಿಲ್ಲೆ563125# 9731549945

ಲಹರಿ Read Post »

ಇತರೆ, ಜೀವನ

ಇತರೆ

ಮರುಕ ಹುಟ್ಟುತ್ತದೆ ವಿದ್ಯಾ ಶ್ರೀ ಎಸ್ ಅಡೂರ್ ಕೆಲವು ಸಮಯದ ಹಿಂದೆ ನಾನು ಪಟ್ಟಣದಲ್ಲಿರುವ ನನ್ನ ಗೆಳತಿಯ ಮನೆಗೆ ಹೋಗಿದ್ದೆ. ಬಾಲ್ಯದ ಗೆಳತಿ.ನಾನು ಮದುವೆಯಾಗಿ ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಶಿಫ್ಟ್ ಆಗಿದ್ದರೆ, ಆಕೆಯೋ ನನ್ನೊಂದಿಗೆ ಹಳ್ಳಿಯಲ್ಲಿ ನನ್ನೆಲ್ಲ ತುಂಟತನಗಳಿಗೆ ಜತೆಯಾಗಿದ್ದವಳು, ಮದುವೆಯಾಗಿ ಮಹಾನಗರವನ್ನು ಸೇರಿ “ಸಿಟಿವಂತ“ಳಾಗಿದ್ದಳು. ಅನೇಕ ವರ್ಷಗಳಿಂದ ಭೇಟಿಯಾಗಿರದಿದ್ದ ನನಗೆ ಮಜಬೂತು ಖಾತರ‍್ದಾರಿಯ ಪ್ಲಾನ್ಮಾಡಿಕೊಂಡಿದ್ದಳು.ಆತ್ಮೀಯತೆಯಿಂದ ನನ್ನನ್ನು ಬರಮಾಡಿಕೊಂಡು ಮಾತಿನಲ್ಲಿ ಮೈಮರೆತಿದ್ದವಳು ಅಚಾನಕ್ಕಾಗಿ ನಾಲಿಗೆ ಕಚ್ಚಿಕೊಂಡು ತನ್ನ ಏಳೆಂಟು ವರ್ಶದ ಮಗಳನ್ನು ಬಳಿಗೆ ಕರೆದು ಕಿವಿಯಲ್ಲಿ ಏನೋ ಪಿಸುಗುಟ್ಟಿದಳು. ಮರುಕ್ಷಣವೇ ಆ ಹುಡುಗಿ ಮನೆಯಿಂದ ಹೊರಗೋಡಿ ಸ್ವಲ್ಪ ಹೊತ್ತಿಗೆ ವಾಪಾಸಾಗಿದ್ದನ್ನು ನಾನು ಕಡೆಗಣ್ಣಿನಲ್ಲಿ ಗಮನಿಸಿದೆ. ಇಡೀದಿನ ಗೆಳತಿಯ ಆದರಾಥಿತ್ಯವನ್ನು ಸ್ವೀಕರಿಸಿ ದಣಿದಿದ್ದ ನಾನು, ಸ್ವಲ್ಪ ಹೊತ್ತು ಆರಾಮಾಗಿ ಕೂತಿರುವಾಗ ಆಕೆಯ ಮಗಳು ನನ್ನ ಜತೆಗೆ ಬಂದು ಕುಳಿತಳು.ನನಗೋ ತಡೆಯದೆ, “ಆಗ ಅಮ್ಮ ನಿನ್ನ ಬಳಿ ಏನು ಹೇಳಿದುದಕ್ಕೆ ನೀನು ಹೊರ ಹೋಗಿಬಂದೆ?” ಎಂದು ಕೇಳಿದೆ. ಮಾತು ತಪ್ಪಿಸಲರಿಯದ ಮುಗ್ಧಮಗು ”ನಮ್ಮ ಮನೆಯ ಫ್ರಿಜ್ಜಿನಲ್ಲಿ ಹಾಲು ಖಾಲಿಯಾಗಿ ಅಮ್ಮನಿಗೆ ತರುವುದು ಮರೆತಿತ್ತು. ಅದಕ್ಕೆ ಪಕ್ಕದ ಮನೆಯ ಆಂಟಿಯ ಫ್ರಿಜ್ಜಿನಿಂದ ಹಾಲು ಇಸಿದುಕೊಂಡು ಬರಲು ಅಮ್ಮ ಕಳಿಸಿದ್ಲು“ ಎಂದು ಹೇಳಿತು. ನಾನು ಪುನಃ ಕುತೂಹಲ ತಡೆಯದೆ ಫ್ರಿಜ್ಜಿಗೆ ಹಾಲು ಎಲ್ಲಿಂದ ಬರುತ್ತೆ ಎಂದು ಕೇಳಿದೆ. ಅದಕ್ಕೆ ಮಗು ”ರಾತ್ರಿ ಮಲಗುವಾಗ ಬಾಗಿಲು ಹತ್ರ ಚೀಟಿ ಹಾಕಿದ್ರೆ, ಬೆಳಿಗ್ಗೆ ಬಾಗಿಲು ತೆಗೆಯುವಷ್ಟರಲ್ಲಿ ಹಾಲು ಬಂದಿರುತ್ತೆ “ಎಂದು ಹೇಳಿತು. ಮನದಲ್ಲಿ ಇನ್ನೂ 2-3 ಪ್ರಶ್ನೆಗಳಿದ್ದರೂ,ಅವುಗಳು ಆ ಮಗುವಿನ ಜ್ಞಾನಕ್ಕೆ ನಿಲುಕದ್ದು ಎಂದು ಸುಮ್ಮನಾದೆ. ಗೆಳತಿಯ ಜತೆ ಬಾಲ್ಯದ ನೆನಪುಗಳನ್ನು ಪುನಃ ಒಮ್ಮೆ ಹಸಿರಾಗಿಸಿ ಸಂಜೆಗೆ ನಮ್ಮೂರಿನ ಬಸ್ಸು ಹತ್ತಿದವಳಿಗೆ “ಫ್ರಿಜ್ಜಿನಹಾಲಿನಮೂಲ” ಮನದಾಳದಲ್ಲಿ ದಾರಿ ಹುಡುಕತೊಡಗಿತ್ತು. ಸರಿಯಾಗಿ ನೆನಪಿಲ್ಲವಾದರೂ ಅಂದಾಜು ನಾನು 2-3ನೇ ತರಗತಿಯಲ್ಲಿರುವಾಗಲೊಮ್ಮೆ ನಮ್ಮ ತಾತ ನಮ್ಮ ಮನೆಗೆ ಬಂದಿದ್ದಾಗ,ಅವರಿಗೆ ಕಾಫಿ ಮಾಡಲೂ ನಮ್ಮ ಮನೆಯಲ್ಲಿ ಹಾಲಿರಲಿಲ್ಲ. ಬಡತನದ ಅಂದಿನ ದಿನಗಳಲ್ಲಿ ಮೂರು ಮಕ್ಕಳ ತಾಯಿಯಾದ ನಮ್ಮಮ್ಮ, ಕೊಂಡು ತಂದು ನಮಗೆ ಹಾಲು ಕುಡಿಸುವಷ್ಟು ಸಿರಿವಂತೆಯಾಗಿರಲಿಲ್ಲ. ಪರಿಸ್ಥಿತಿಯನ್ನು ಅರ‍್ಥ ಮಾಡಿಕೊಂಡ ನಮ್ಮ ತಾತ ಅಮ್ಮನಿಗೆ “ನೀನು ಮದುವೆಗೂ ಮುಂಚೆ ಹಟ್ಟಿ ತುಂಬಾ ದನಕರುಗಳನ್ನು ಕಟ್ಟಿ, ಸಾಕಿ,ಹಾಲನ್ನುಮಾರಿ,ಮನೆಯಲ್ಲಿ ಹಾಲು, ಮಜ್ಜಿಗೆ, ತುಪ್ಪ ಎಂದು ಸಮೃದ್ಧಿಯನ್ನು ಉಂಟುಮಾಡಿದ್ದವಳು. ಈಗ ನಿನ್ನ ಮಕ್ಕಳಿಗೆ ಹಾಲಿಲ್ಲವೆಂದು ಕೊರಗಬೇಡ. ನಿನ್ನಿಷ್ಟದ ಕರು ಈಗ ಹಸುವಾಗಿ ಯಥೇಚ್ಚ ಹಾಲನ್ನು ನೀಡುತ್ತಿದೆ. ಅದನ್ನು ನಿನ್ನಲ್ಲಿಗೆ ಕಳಿಸಿಕೊಡುತ್ತೇನೆ. ಮಕ್ಕಳು ಹಾಲು, ಮಜ್ಜಿಗೆಯ ಬಣ್ಣ ನೋಡಲಿ ಎಂದಾಗ ಅಮ್ಮ ಮತ್ತು ಅಜ್ಜನ ಕಣ್ಣಾಲಿಗಳು ತುಂಬಿದ್ದವು. ಮಾತಿಗೆ ತಪ್ಪದೇ ಅಜ್ಜ ಹಸುವನ್ನೂ ಅದರ ಕರುವನ್ನೂ ನಮ್ಮಲ್ಲಿಗೆ ಕಳುಹಿಸಿಯೇಬಿಟ್ಟರು .ಅನೇಕ ವರ‍್ಷಗಳಿಂದ ಅಮ್ಮನನ್ನು ನೋಡಿರದಿದ್ದ ಅಮ್ಮನೇ ಸಾಕಿದ್ದಹಸು, ಅಮ್ಮನನ್ನು ನೋಡಿ ಬಾಲ ನಿಮಿರಿಸಿ ಕುಣಿದು ಕುಪ್ಪಳಿಸಿತು .”ಬಂದೆಯಾ ಕುಂಟಿಮಾಚಕ್ಕ” ಎಂದು ಅಮ್ಮ ಹಸುವನ್ನು ಸ್ವಾಗತಿಸಿದಾಗ., ಇದೆಂತ ಹೆಸರು ಎಂಬ ನಮ್ಮ ಪ್ರಶ್ನೆಗೆ, ಕುಳ್ಳಗಿನ ಮಾಚಕ್ಕ ಎಂಬ ಹಸು ಕೊಂಡಾಟದಲ್ಲಿ ಕುಂಟಿಮಾಚಕ್ಕ ಎಂದಾಗಿದೆ ಎಂದರು.ನಮಗಂತೂ ಅದಕ್ಕಾಗಿ ಕಟ್ಟಿದ ಸಣ್ಣ ಹಟ್ಟಿಗೆ ದಿನಕ್ಕೊಂದು ಐವತ್ತು ಸಲ ಹೋಗಿ ಹಸು ಕರುವನ್ನು ನೋಡಿಕೊಂಡು ಬರುವುದೇ ಒಂದು ಸಂಭ್ರಮವಾಯಿತು .ಅಲ್ಲಿಂದ ಮುಂದೆ ನಮಗೆ ಕುಡಿಯಲು ಮಾತ್ರವಲ್ಲದೆ ಮಾರಾಟ ಮಾಡುವುದಕ್ಕೂ ಹಾಲು ಒದಗತೊಡಗಿತು. ಅನಂತರ ಹುಟ್ಟಿದ ಕರುಗಳಿಗೆ ಹೆಸರಿಡುವುದೇ ನಮಗೊಂದು ಸಂಭ್ರಮ. ಮೊದಲು ಹುಟ್ಟಿದವಳೇ ”ಚಿನ್ನಿ”. ಹೆಸರಿಗೆ ತಕ್ಕಂತೆ ಚಿನ್ನದಂತಹ ಹಸು. ನಮ್ಮಿಂದ ಹೆಚ್ಚಿನ ಕೊಂಡಾಟವನ್ನು ಅಪೇಕ್ಷಿಸದ ಅವಳಿಗೆ ತನ್ನ ಕಣ್ಣುಗಳಲ್ಲಿ ಉಕ್ಕುವ ಪ್ರೀತಿಯನ್ನು ಮರೆಮಾಚಲು ಗೊತ್ತಿರಲಿಲ್ಲ. ಅನಂತರ ಪುಟ್ಟಿ…ಬಂಗಾರಿ …ಹೀಗೆ ಸುಮಾರು ಕರುಗಳಾದವು. ಮೊದಲ ಎರಡು ತಿಂಗಳು ಕರುಗಳೆಲ್ಲ ಮನೆಯ ಒಳಗೇ ವಾಸ. ಮನೆಯೊಳಗೆ ಅವಕ್ಕೆ ಬೇಕಾದಲ್ಲಿ ಹೋಗಿ ಕೂರುವುದು, ಮಲಗುವುದು ಮಾಡುತ್ತಿದ್ದವು. ಮುಸ್ಸಂಜೆಗೆ ಎಲ್ಲರೂ ಕೂತು ದೇವರ ಭಜನೆ, ಶ್ಲೋಕ ಹೇಳುವಾಗ ನಮ್ಮ ಬಳಿಯೇ ಬಂದು ಅಂಟಿ ಕೂರುತ್ತಿದ್ದವು. ರಾತ್ರಿ ಚಾಪೆ ಹಾಸಿ ಮಲಗುವಾಗ ನಮ್ಮ ಚಾಪೆಯಲ್ಲೇ ಬಂದು ಮಲಗುತ್ತಿದ್ದವು. ಆದರೆ ಅಸಲಿ ಆಟ ಶುರುವಾಗಿದ್ದೇ ಚಿನ್ನಿ ಕರು ಹಾಕಿದ ನಂತರ.ಆವರೆಗಿನ ಎಲ್ಲಾ ಕರುಗಳೂ ಊರಿನ ತಳಿಯವಾಗಿದ್ದರೆ, ಚಿನ್ನಿ ಹಾಕಿದ ಕರು ಬೇರೆ ತಳಿ. ಉದ್ದಉದ್ದ ಕೈ..ಕಾಲಿನ, ದೊಡ್ಡ ದೊಡ್ಡ ಕಿವಿಯ, ನೀಲಿಕಣ್ಣಂಚಿನ, ಇಟ್ಟಿಗೆಬಣ್ಣದ, ಹಣೆಯ ಮೇಲೆ ಎರಡು ಬಿಳಿಯ ಬೊಟ್ಟುಳ್ಳ, ಬೆಣ್ಣೆಯಂತೆ ನುಣುಪಾದ ಕೂದಲಿನ, ಮುದ್ದು ಮುದ್ದಾಗಿ ಓಡಾಡುತ್ತ ನಮ್ಮ ಮಡಿಲಿನಲ್ಲೇ ಎಂಬಂತೆ ಬಂದು ಕೂರುತ್ತಿದ್ದ ಸುಂದರಿ ಕರುವಿಗೆ ನಾವೆಲ್ಲರೂ ಒಮ್ಮತದಿಂದ ಇಟ್ಟ ಹೆಸರು “ಸಿಂಗಾರಿ”.ನಾವೆಲ್ಲರೂ ಆಕೆ ಧರೆಗಿಳಿದ ಶಾಪಗ್ರಸ್ತ ಅಪ್ಸರೆಯೇನೋ ಎಂಬಂತೆ ಅವಳ ಮೋಹಕ್ಕೆ ಒಳಗಾಗಿದ್ದೆವು. ಸಂಜೆ ಶಾಲೆ ಬಿಟ್ಟಾಗ ಎಲ್ಲಿಯೂ ನಿಲ್ಲದೆ ಓಡೋಡಿ ಬಂದು ಅವಳ ಜೊತೆ ಆಟಕ್ಕೆ ಬೀಳುತ್ತಿದ್ದೆವು. ಸ್ವಲ್ಪ ಸಮಯದ ನಂತರ ಮನೆ ಬಿಟ್ಟು ಆಕೆ ಹಟ್ಟಿಗೆ ಶಿಫ್ಟ್ ಆದಮೇಲೆ ನಾವೆಲ್ಲ ನಮ್ಮ ನಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳತೊಡಗಿದರೆ ಕೊನೆಯವನಾದ ನನ್ನ ತಮ್ಮ, ಅವಳ ಜೊತೆ ಹಟ್ಟಿಗೇ ಶಿಫ್ಟ್ ಆಗಿಬಿಟ್ಟಿದ್ದ. ಸಂಜೆ ಹೊತ್ತು ಶಾಲೆ ಮುಗಿಸಿ ಬಂದು, ತಿನ್ನಲು ಹಾಳುಮೂಳುಗಳೆಲ್ಲಾ ಇರದ ಆ ದಿನಗಳಲ್ಲಿ, ಬೆಲ್ಲ ತಿನ್ನುವುದು ಅಭ್ಯಾಸ ಮಾಡಿಕೊಂಡಿದ್ದ ಆತ,ತನ್ನ ಅಂಗಿಯ ಕಿಸೆ ತುಂಬಾ ಬೆಲ್ಲದ ಚೂರುಗಳನ್ನು ತುಂಬಿಕೊಂಡು ಹೋಗಿ ದನಗಳಿಗೆ ಹುಲ್ಲು ಹಾಕುವ ಬೈಪಣೆಯಲ್ಲಿ ಮಲಗಿಬಿಡುತ್ತಿದ್ದ. ಅವನ ಕೆನ್ನೆ,ಮುಖ, ಕೈಯನ್ನೆಲ್ಲಾ ನೆಕ್ಕುತ್ತಿದ್ದ ಚಿನ್ನಿ ಮತ್ತು ಸಿಂಗಾರಿ ಬೆಲ್ಲದ ಪರಿಮಳಕ್ಕೆ ಕಿಸೆಯೊಳಗೇ…… ನಾಲಿಗೆ ಹಾಕಿ ಬೆಲ್ಲ ಖಾಲಿ ಮಾಡುತ್ತಿದ್ದವು. ಕಾಲ ಸರಿದಂತೆ ಕರುವಾಗಿದ್ದ ಸಿಂಗಾರಿ ದನವಾಗಿ ತಾನೇ ಕರು ಹಾಕತೊಡಗಿದಾಗ, ನಮಗೋ ಅವುಗಳಿಗೆ ಹೆಸರಿಡುವುದೇ ಒಂದು ಸಂಭ್ರಮ. ರಾಜ…ಭೋಜ ಇನ್ನೂ ಏನೇನೋ.. ನಮ್ಮ ಮೂರು ಜನ ಮಕ್ಕಳ ಬದುಕು ರೂಪಿಸುವ ಜವಾಬ್ದಾರಿ ಹೊತ್ತ ನಮ್ಮ ಅಮ್ಮನ ಹೊರೆ ಹೆಚ್ಚಾಗಿದ್ದುದರಿಂದ ಖರ್ಚಿನ ನಿರ‍್ವಹಣೆಗೂ ನಾವು ಜಾನುವಾರುಗಳನ್ನು ಅವಲಂಬಿಸಿದ್ದೆವು. ಮೂರು ಹೊತ್ತೂ ಹುಲ್ಲು ಹೆರೆದು ಹಾಕಿ ಸಾಕಲು ಕಷ್ಟವಾಗುತ್ತಿದ್ದರಿಂದ ಹಗಲು ಹೊತ್ತು ಗುಡ್ಡೆಗೆ ಹೋಗಿ ತಾವೇ ಮೇಯಲು ಬಿಟ್ಟುಬಿಡುತ್ತಿದ್ದೆವು. ದಿನವಿಡೀ ಮೇದು ಸಂಜೆಗೆ ಮನೆಗೆ ಮರಳುತ್ತಿದ್ದವು. ನಮ್ಮ ಚಿನ್ನಿ ನಾಯಕತ್ವದ ದನಗಳ ಗುಂಪು. ಆದರೆ ಎಲ್ಲರಂತಲ್ಲದ ನಮ್ಮ ಸಿಂಗಾರಿ ಈ ವಿಷಯದಲ್ಲಿ ಹೇಗೆ ಎಲ್ಲರಂತೆ ಆದಾಳು?ಹಗಲು ಮೇಯುವಾಗ ಅವಳಿಗೆ ಹೊಟ್ಟೆತುಂಬುತ್ತಿರಲಿಲ್ಲವೋ,..ಅಲ್ಲ ಬೇಕೆಂದೇ ಚೇಷ್ಟೆ ಮಾಡುತ್ತಿದ್ದಳೋ…..?ಕೆಟ್ಟಬುಧ್ಧಿಯೊಂದು ಕಲಿತುಬಿಟ್ಟಳು. ಸಂಜೆ ಎಲ್ಲರೊಂದಿಗೆ ಮನೆಗೆ ಬರದೆ, ಎಲ್ಲಾದರೂ ಮರೆಯಲ್ಲಿ ಕಾದಿದ್ದು, ಹಗಲು ಗುರುತು ಮಾಡಿಕೊಂಡಿರುವ ಜಾಗಕ್ಕೆ ರಾತ್ರಿ ಹೋಗಿ ಮೇದು,ನಡುರಾತ್ರಿಯಲ್ಲಿ ವಾಪಾಸಾಗುತ್ತಿದ್ದಳು.ಅದೂ ಇಡೀ ಊರಿಗೇ ಕೇಳುವಂತೆ ಶಂಖ ಊದಿದಂತೆ ಕೂಗಿಕೊಂಡು. ಕ್ರಮೇಣ ದಿನ ಕಳೆದಂತೆ ಫಸಲು ಕಳೆದುಕೊಂಡ ಒಬ್ಬೊಬ್ಬರೇ ಬಂದು ಅಮ್ಮನಲ್ಲಿ ದೂರು ಹೇಳಲು ಸುರುಮಾಡಿದರು. ಕಟ್ಟಿ ಹಾಕಿ ಸಾಕುವ ಸಾಧ್ಯತೆಗಳೇ ಇಲ್ಲದೆ ಅಮ್ಮ ಒಳಗಿಂದೊಳಗೇ ಪೇಚಾಡತೊಡಗಿದರು. ಕಡೆಗೂ ಅವಳನ್ನು ಯಾರಾದರೂ ಸಾಕಿಕೊಳ್ಳುವವರಿಗೆ ಕೊಡುವುದು ಎಂದು ತೀರ‍್ಮಾನವಾದಾಗ ಹೊಟ್ಟೆಯೊಳಗೆ ಆದ ಸಂಕಟವನ್ನು ನಾನು ಇವತ್ತಿಗೂ ಅನುಭವಿಸಬಲ್ಲೆ. ಪೇಟೆಯಲ್ಲಿ ಅಪ್ಪನ ಅಂಗಡಿ ಸಮೀಪದ ಮನೆಯವರು ಬಂದು ಅವಳನ್ನು ಕರೆದೊಯ್ಯುವಾಗ ನಾವು ಮನೆಯಲ್ಲಿರಲಿಲ್ಲಮರುದಿನ ಅಂಗಡಿಗೆ ಹೋದ ಅಪ್ಪ ರಾತ್ರಿ ಮರಳುವಾಗ ಮಾಮೂಲಿನಂತಿರಲಿಲ್ಲ. ಏನೆಂದು ವಿಚಾರಿಸಿದಾಗ ಅವರು ಹೇಳಿದ್ದು, “ಸಿಂಗಾರಿ ಅಂಗಡಿ ಬಳಿ ಬಂದವಳು ಸಂಜೆವರೆಗೂ ಹೋಗಲೇಇಲ್ಲ. ಅಂಗಡಿ ಬಾಗಿಲಲ್ಲೇ ಮಲಗಿದ್ದಳು”ಎಂದು.ನಮಗೆಲ್ಲ ಹೃದಯ ಗಂಟಲಲ್ಲಿ ಸಿಕ್ಕಿಹಾಕಿಕೊಂಡ ಅನುಭವ. ಹೊಟ್ಟೆಯಲ್ಲಿ ಅದೇನೋ ಕಿಚಿಪಿಚಿ.ಮರುದಿನ ಅಪ್ಪ ಅಂಗಡಿಗೆಹೊರಟಾಗ, ಆವತ್ತಿನ ತಿಂಡಿಯದೊಂದು ಪೊಟ್ಟಣ ಕಟ್ಟಿ ಅಮ್ಮ, ಅಪ್ಪನ ಕೈಗಿತ್ತು”ಸಿಂಗಾರಿಗೆ ತಿನ್ನಿಸಿ “ಎಂದಾಗ ಆಕೆಯ ಕಣ್ಣಂಚಿನಲ್ಲಿ ನೀರು ಜಿನುಗಿದ್ದನ್ನು ಆಕೆಗೆ ನಮ್ಮಿಂದ ಮರೆಮಾಚಲಾಗಲಿಲ್ಲ ಎಂಬುವುದು ನನಗೆ ಇಂದಿಗೂ ನೆನಪಿದೆ. ಇವತ್ತಿನ ಆಧುನಿಕತೆಯ ನಾಗಾಲೋಟದ ನಡುವೆಯೂ ಹಟ್ಟಿಯಲ್ಲಿರುವ ಹಸುಕರುಗಳಿಗೆ ಹೆಸರಿಟ್ಟು, ಅವುಗಳ ಜೊತೆಗೆ ಕುಣಿದು ಸಂಭ್ರಮಿಸುವ ನನ್ನ ಮಗಳನ್ನು ನೋಡಿದರೆ, ಸಧ್ಯ ನಾನೂ ನನ್ನ ಗೆಳತಿಯಂತೆ ಸಿಟಿವಂತಳಾಗದೇ ಉಳಿದೆನಲ್ಲಾ ಎಂದು ಸಮಾಧಾನವಾದರೂ…….ಕಾಮನ್ಸೆನ್ಸ್ ಇಲ್ಲದ, ಹಳ್ಳಿಗರು ಎಂದರೆ ತಾತ್ಸಾರ ಮಾಡುವ ಸಿಟಿಯವರನ್ನು ನೆನೆದರೆ ಮರುಕ ಹುಟ್ಟುತ್ತದೆ.*************

ಇತರೆ Read Post »

ಇತರೆ, ಜೀವನ

ಪ್ರಸ್ತುತ

ಮತ್ತೆ ಕಾಣಬಲ್ಲೆವೇ ಆ ದಿನಗಳನು..? ಮಲ್ಲಿಕಾರ್ಜುನ ಕಡಕೋಳ ದುರಿತಕಾಲ ಎಂಬ ಪದ ನಾವೆಲ್ಲ ಬರಹಗಳಲ್ಲಿ ಸೂಕ್ಷ್ಮತೆಯಿಂದ ಬಳಕೆ ಮಾಡಿದ ಪರಿಚಯವಿತ್ತು. ಪ್ರಸ್ತುತ ನಾವು ಅನುಭವಿಸುತ್ತಿರುವ ಖರೇ, ಖರೇ ದುರಿತಕಾಲದ ಈ ದಿನಗಳಿಗೆ ಕೊನೆಯೆಂಬುದು ಯಾವಾಗ ಎಂಬ ದುಗುಡ ನಮ್ಮನ್ನೀಗ ಘೋರವಾಗಿ ಬಾಧಿಸುತ್ತಿದೆ. ಅಷ್ಟಕ್ಕೂ ಕೊರೊನಾದ ಈ ಕಾಲಘಟ್ಟಕ್ಕೆ ಕೊನೆಯೆಂಬುದು ಇದೆಯೋ, ಇಲ್ಲವೋ ಎಂಬ ಕ್ರೂರ ಆತಂಕ. ಹಗಲು ರಾತ್ರಿಗಳೆನ್ನದೇ ಕಿವಿ, ಕಣ್ಣು, ಬಾಯಿ, ಮೂಗು, ಮನಗಳ ತುಂಬೆಲ್ಲ ಸೋಂಕಿತರು, ಶಂಕಿತರು, ರೆಡ್ ಝೋನ್, ಎಲ್ಲೋ ಝೋನ್, ಪೋಲಿಸರು, ವೈದ್ಯರಿಗೇ ಸೋಂಕು ಪದಗಳ ರಕ್ಕಸ ಕುಣಿತ. ಇವುಗಳ ಜೊತೆಗೆ ಜಾಗತಿಕ ಮಟ್ಟದ ಲಕ್ಷ ಲಕ್ಷ ಸಂಖ್ಯೆಯ ಸಾವು ನೋವಿನ ಅಂಕಿ ಅಂಶಗಳ ರುದ್ರನರ್ತನ. ಹುಟ್ಟೂರಿಗೆ ಹೋಗಿಯೇ ಸಾಯಬೇಕೆಂಬ “ಬದುಕಿಗಾಗಿ” ರಹದಾರಿಗಳಿಲ್ಲದೇ ಸಾವಿರಾರು ಮಂದಿ ನೂರಾರು ಹರದಾರಿ ನಡಕೊಂಡೇ ಹೋದವರು. ಹಾಗೆ ನಡಕೊಂಡು ಹೋಗುವ ನಡುದಾರಿಯಲ್ಲೇ ನೀರು – ಕೂಳಿಲ್ಲದೇ ಪ್ರಾಣಬಿಟ್ಟ ಬಸುರಿ – ಬಾಣಂತಿ, ತಾಯಿಮಕ್ಕಳ ಸಂಕಟದ ಸಾಲು ಸಾಲು ಸರಗಥೆಗಳು. ಹೀಗೆ ಅರಣ್ಯ ರೋದನವಾಗುತ್ತಿರುವ ಒಂದೆರಡಲ್ಲ ನಿತ್ಯವೂ ನೂರಾರು ಸಂಕಟಗಳ ಕರುಳು ಹಿಂಡಿ ಹಿಪ್ಪೆಮಾಡುವ ದೃಶ್ಯಗಳಿಗೆ ಕೊನೆಯೆಂಬುದಿದೆಯೇ ? ಇದ್ದರೆ ಯಾವಾಗ..? ಕೊರೊನಾ ಸಂದರ್ಭದಲ್ಲಿ ಮನುಷ್ಯ, ಮನುಷ್ಯರ ನಡುವಿನ ದೈಹಿಕ ದೂರ ಕಾಪಾಡಬೇಕೆಂಬುದು ವೈಜ್ಞಾನಿಕ ಸತ್ಯ. ವಿದೇಶಗಳಲ್ಲಿ ಸೋಶಿಯಲ್ ಗ್ಯಾದರಿಂಗ್ ಹಿನ್ನೆಲೆಯಲ್ಲಿ ಸೋಶಿಯಲ್ ಡಿಸ್ಟನ್ಸ್ ಎಂದು ಕರೆದಿರಬಹುದು. ಆದರೆ ಬಹುತ್ವ ಭಾರತದ ಸಂದರ್ಭದಲ್ಲಿ ಅದನ್ನು ಸಾಮಾಜಿಕ ಅಂತರ ಎಂಬ ಹೆಸರಿಂದ ಕರೆಯುವ ಮೂಲಕ ಅದು ಭಯ ಮೂಲದ್ದು ಎಂಬುದು ಮಾತ್ರವಲ್ಲದೇ ಜನಸಂಸ್ಕೃತಿ ವಿರೋಧಿಜನ್ಯ ಭಾವಕ್ಕೆ ಹತ್ತಿರವಾಗಿದೆ. ಅದು ವ್ಯಕ್ತಿಗತ ಅಥವಾ ದೈಹಿಕ ಅಂತರ – ದೂರ ಎಂಬುದು ವಾಸ್ತವವೇ ಆದರೂ ಹಾಗೇಕೆ ಕರೆಯುತ್ತಿಲ್ಲ.? ಮಡಿ – ಮೈಲಿಗೆ ಎಂಬಂತೆ ಸಾಮಾಜಿಕ ಅಂತರ ಎಂದು ಕರೆಯುವ ಮೂಲಕ ಅದು ಹುಟ್ಟುಹಾಕುತ್ತಿರುವ ಭಯ ಮಾತ್ರ ಭಯಂಕರ. ಕೊರೊನಾಗಿಂತ ಕೊರೊನಾ ಕುರಿತು ಹುಟ್ಟಿಕೊಂಡಿರುವ ಈ ತೆರನಾದ ಆತಂಕಕಾರಿ ಜೈವಿಕ ಸಂಸ್ಕೃತಿ (Bio Culture) ಬಣ್ಣಿಸಲಸದಳ. ಈ ಕೊರೊನಾಮಾರಿ ಮನುಷ್ಯ ಮನುಷ್ಯರ ನಡುವಿನ ಜೀವ ಸಂಬಂಧಗಳನ್ನು ನಿರ್ನಾಮಗೊಳಿಸುತ್ತಿದೆ. ಜೀವ ಕಕುಲಾತಿಯ ಸಹಬಾಳ್ವೆ, ಸಹಿಷ್ಣುತೆ, ಸಮಷ್ಟಿ ಪ್ರಜ್ಞೆಯ ಸಾಮೂಹಿಕ ಬದುಕು ಮತ್ತೆ ಮರಳಿ ಬರುವುದೇ ಎಂಬ ಶಂಕೆ. ಒಡೆದು ಹೋಗುತ್ತಿರುವ ಸಹಮತದ ಜೀವಗನ್ನಡಿ ಹರಳು ಮತ್ತೆ ಬೆಸೆದೀತೇ.? ಎಲ್ಲವೂ ಸರಿಯಾಗುವವರೆಗೆ ಲಾಕ್ ಡೌನ್, ಸೀಲ್ ಡೌನ್ ಪ್ರಕ್ರಿಯೆಗಳು ಮುಂದುವರೆದರೆ ನಾವೆಲ್ಲ ಬದುಕುಳಿಯಬಹುದೇ.? ಹೀಗೆ ಏನೇನೋ ಜೀವದುಸಿರು ಸೂತಕದ ಆಲೋಚನೆಗಳು. ಸಣ್ಣದೊಂದು ಸಮಾಧಾನದ ಸಂಗತಿಯೆಂದರೆ ಟೀವಿಗಳಲ್ಲಿ ಗಂಟೆಗಟ್ಟಲೇ ಕೊರೆಯುತ್ತಿದ್ದ, ಮನುಕುಲದ ಉದ್ದಾರಕ್ಕಾಗಿಯೇ ಹುಟ್ಟಿ ಬಂದವರಂತೆ ತರಹೇವಾರಿ ಫೋಸು ಕೊಡುತ್ತಿದ್ದ ದೇವಮಾನವ ನಾಮಾಂಕಿತ ಜೋತಿಷಿಗಳು ನಾಪತ್ತೆಯಾಗಿದ್ದಾರೆ. ಕೊರೊನಾ ಹೋದಮೇಲೂ ಅವರು ಮತ್ತೆ ಬಾರದಿರಲಿ. ಆಯುರ್ವೇದ, ಅಲೋಪತಿ, ಸಿದ್ಧ, ಹೋಮಿಯೋಪಥಿ ಯಾವುದರಲ್ಲಿ ಇದಕ್ಕೆ ನೆಟ್ಟಗಾಗುವ ಮದ್ದಿದೆ ? ದಿನಕ್ಕೊಂದಲ್ಲ ಹತ್ತಾರು, ನೂರಾರು ತರಹೇವಾರಿ ಸುದ್ದಿಗಳಿಂದ ಬದುಕು ಅಕ್ಷರಶಃ ಗದ್ಗದಿತವಾಗಿದೆ. ಸಾವಿಗಿಂತಲೂ ಸಾವಿನ ಕುರಿತಾದ ಸಾವಿನಪ್ಪನಂತಹ ಸುದ್ದಿಗಳನ್ನು ಜೀರ್ಣಿಸಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಇದೆಲ್ಲವೂ ತಿಂಗಳೊಪ್ಪತ್ತಿನಿಂದ ನಾಗಾಲೋಟದಲ್ಲಿ ನೂರಿನ್ನೂರನೇ ಪ್ರಯೋಗದಲ್ಲಿ ಮುನ್ನುಗ್ಗುತ್ತಿರುವ ಪ್ರಸಿದ್ಧ ಕಂಪನಿ ನಾಟಕಗಳ ಪ್ರಯೋಗಗಳಂತೆ. ಆದರಿದು ಕುಪ್ರಸಿದ್ಧವಾಗುತ್ತಿರುವ ಕೊರೊನ ಎಂಬ ಮಹಾರಾಕ್ಷಸತ್ವದ ಕರಾಳ ಕಥೆ. ಮನುಷ್ಯರ ಬದುಕು ಬರ್ಬರಗೊಳ್ಳುತ್ತಿರುವ ದುಃಖಸಾಗರದ ಕಥೆ. ಜನರ ಜೀವನ ಅಕ್ಷರ ಅಕ್ಷರಶಃ ತತ್ತರಿಸಿ ಹೋಗಿದೆ. ಆದರೆ ಇಂತಹ ಸಂಕಟಗಳನ್ನು ಹಾಡು, ರೂಪಕ, ಸಣ್ಣಾಟ, ಜಾನಪದ, ಪ್ರಹಸನ, ಕವನ ಮುಂತಾದ ಪ್ರಕಾರಗಳಲ್ಲಿ ಜನಕಲಾವಿದರು ತೋರಿಸುವ ಕ್ರಿಯಾಶೀಲತೆ ಮಾತ್ರ ತುಂಬಾ ಚುರುಕಾಗಿದೆ. ಬಡವರು ಸತ್ತಾರ ಸುಡಲಾಕ ಸೌದಿಲ್ಲ ! ಶಿವನೇ ಬಡವರಿಗೆ ಸಾವು ಕೊಡಬೇಡ !! ಸಾವಿನ ಘನಘೋರ ಸಂದರ್ಭದಲ್ಲೂ ನಮ್ಮ ಜನಪದರ ಕರುಳಿನ ಸಂಕಟ ಕೊರಳ ಸಿರಿಕಂಠದ ಮೂಲಕ ಜೀವದ ಹಾಡಾಗಿ, ಪಾಡಾಗಿ ಹೊರಹೊಮ್ಮುತ್ತದೆ. ಅದು ನಮ್ಮ ಜೀವಪರ ಜನಸಂಸ್ಕೃತಿ. ಅದು ಶಿವಸಂಸ್ಕೃತಿ. ಸಾವಿನ ಬಗ್ಗೆ ಅವರಿಗೆ ಭಯವಿಲ್ಲ. ಆದರೆ ಸತ್ತರೆ ಸುಡಲು ಸೌದೆಇಲ್ಲ. ಅದಕ್ಕೆಂದೇ ಶಿವನೆ ಬಡವರಿಗೆ ಸಾವು ಕೊಡಬೇಡವೆಂದು, ಅವರು ಬಡತನದ ಬೇಗೆಯಲ್ಲೇ ಬೆಂದುಹೋಗುವ ಸತ್ಯದ ಮೊರೆತ ಅವರದು. ಒಡಲುಗೊಂಡವ ಹಸಿವ, ಒಡಲುಗೊಂಡವ ಹುಸಿವ, ಒಮ್ಮೆ ನೀನು ಒಡಲುಗೊಂಡು ನೋಡಾ ರಾಮನಾಥ., ಎಂದು ದೇವರ ದಾಸಿಮಯ್ಯ ದೇವರಿಗೆ ಹಾಕುವ ಒಡಲಿನ ಸವಾಲು, ಪ್ರಪಂಚದ ಯಾವ ವೇದಾಂತ, ಸಿದ್ದಾಂತ, ಸಾಹಿತ್ಯ ಹೇಳಿಲ್ಲ. ಇಂತಹ ಪರಮಸತ್ಯದ ಸವಾಲು ನಮ್ಮ ಸಂಸ್ಕೃತಿ. ಈಗ ಅವುಗಳಿಗೆ ಸಾಮಾಜಿಕ ಜಾಲತಾಣಗಳೇ ಬಹುದೊಡ್ಡ ಮಾಧ್ಯಮ. ಜನಸಮೂಹದ ನೆಲೆದಾಣಗಳಲ್ಲಿ ಸಾರ್ವತ್ರಿಕ ಅವಕಾಶಗಳಿಲ್ಲವಾದ್ದರಿಂದ ಸಧ್ಯಕ್ಕೀಗ ಸಾಮಾಜಿಕ ಅಂತರ ಕಾಪಾಡಿಕೊಂಡಿರುವ ಸಾಮಾಜಿಕ ಜಾಲತಾಣಗಳೇ ಏಕೈಕ ಸಂವಹನ ಸಾಧನಗಳು. ನಾಕೈದು ತಿಂಗಳುಕಾಲ ಅಂದರೆ ಬೇಸಿಗೆಯ ಆರಂಭದ ಒಂದೆರಡು ವಾರ ಮೊದಲೇ ಆರಂಭಗೊಂಡು ಮಿರುಗ (ಮೃಗಶಿರ)ದ ಮಳೆಯವರೆಗೂ ನಾಡಿನ ತುಂಬಾ ಜರುಗುವ ಜಾತ್ರೆ, ಸಾಂಸ್ಕೃತಿಕ ಹಬ್ಬ ಹರಿದಿನಗಳದ್ದೇ ಸಂಭ್ರಮ, ಸಡಗರ. ಜನವರಿ ತಿಂಗಳು ಬಹುಪಾಲು ಸಂಕ್ರಮಣಕ್ಕೆ ಮೊದಲೇ ಆರಂಭಗೊಳ್ಳುವ, ಜನಜೀವಾಳವೇ ಆಗಿರುವ ರೈತಾಪಿ ಬದುಕಿನ ಸುಗ್ಗಿ, ದೇವರು ದಿಂಡರ ಪರಿಷೆ, ಜನಪದರ ಜಾತ್ರೆ, ಸಾರ್ವಜನಿಕ ಪ್ರೀತಿ ಹುಟ್ಟಿಸುವ ಹತ್ತು ಹಲವು ಮಹೋತ್ಸವಗಳ ಸಾಂಸ್ಕೃತಿಕ ಸುಗ್ಗಿಯಕಾಲ. ಜನವರಿಯಿಂದ ಮೇ, ಜೂನ್ ಮುಗಿಯೋಮಟ ಜನಸಂಸ್ಕೃತಿಯ ಕಲಾಪ್ರದರ್ಶನಗಳಿಗೆ ಹೇಳಿ ಮಾಡಿಸಿದ ಕಾಲ. ರೈತಾಪಿ ಕೆಲಸಗಳು ಮುಗಿದು ಜನರ ಬದುಕಿನ ಸಾಹಿತ್ಯ, ಹಾಡು, ಕುಣಿತ ಒಟ್ಟು ಎಲ್ಲ ಕಲಾಪ್ರಕಾರ ಪ್ರದರ್ಶನಗಳ ಸಂಭ್ರಮಕಾಲ. ಸಡಗರದ ಕಾಲ. ಈ ಸಡಗರ ಸಂಭ್ರಮಗಳಿಗೆ ಈ ಬಾರಿ ಅವಕಾಶವೇ ಇಲ್ಲವಾಯಿತು. ಕೊರೊನಾ ಇಲ್ಲದಿದ್ದರೆ ಇದು ತಿಂಗಳುಗಳ ಕಾಲ ಜಾತ್ರೆಗಳು ಜರುಗುವ ಸಮಯ. ಜಾತ್ರೆಗಳಲ್ಲಿ ನಾಟಕ ಕಂಪನಿಗಳಿಗೆ ರಂಗನಾಟಕಗಳ ಬಂಪರ್ ಸುಗ್ಗಿಯ ಸಂಭ್ರಮ. ಪುಣ್ಯಕ್ಕೆ ನಾಟಕಗಳ ಜಾತ್ರೆಯೆಂದೇ ಪ್ರಸಿದ್ದವಾದ ಬನಶಂಕರಿ ಜಾತ್ರೆಯ ಸದುಪಯೋಗ ಹನ್ನೊಂದು ನಾಟಕ ಕಂಪನಿಗಳು ಮಾಡಿಕೊಂಡವು. ಆ ನಂತರ ಮಾರ್ಚ್ ಮೊದಲ ವಾರದಿಂದ ಜಾತ್ರೆಯ ಕ್ಯಾಂಪುಗಳದ್ದು ನೋವಿನ ಮಜಕೂರ. ಕಲಾವಿದರ ನಿತ್ಯದ ಬದುಕಿಗೂ ತತ್ವಾರ. ನಾಟಕ ಕಂಪನಿಗಳ ಕಲಾವಿದರೆಲ್ಲ ಮನೆ ಸೇರಿದ್ದಾರೆ. ಹಳ್ಳಿಯ ಜಾತ್ರೆಗಳಲ್ಲಿ ಜರುಗುವ ವೃತ್ತಿರಂಗ ನಾಟಕಗಳಲ್ಲಿ ಅಭಿನಯಿಸುವ ನೂರಾರು ಮಂದಿ ಹವ್ಯಾಸಿ ಕಲಾವಿದೆಯರು ನಿರುದ್ಯೋಗದ ನಿಟ್ಟುಸಿರು ಬಿಡುತ್ತಿದ್ದಾರೆ. ಮುಖ್ಯವಾಗಿ ಮದುವೆಗಳ ಸೀಜನ್ ಇದಾಗಿತ್ತು. ಮಂಗಳವಾದ್ಯ ನುಡಿಸುವ ಕಲಾವಿದರಿಗೆ ಅಗ್ನಿಪರೀಕ್ಷೆಯಂತಹ ಬದುಕಿನ ಪ್ರಶ್ನೆಯ ಸಮಯ. ಅವರ ಕುಟುಂಬ ನಿರ್ವಹಣೆ ಅಕ್ಷರಶಃ ಸಂಕಟಮಯ. ಸಿನೆಮಾ, ಧಾರಾವಾಹಿಗಳಲ್ಲಿ ಕೆಲಸ ಮಾಡುವ ಕಲಾವಿದರು, ತಂತ್ರಜ್ಞರ ಜೀವನ ಸಂಕಷ್ಟಕ್ಕೀಡಾಗಿದೆ. ಪುಸ್ತಕಗಳ ಪ್ರಕಟಣೆ ಸ್ಥಬ್ಧಗೊಂಡಿದೆ. ಹೀಗೆ ವಿರಮಿಸಿರುವ ಸಂಸ್ಕೃತಿ ಸಂಬಂಧಿತ ಬಹುದೊಡ್ಡ ಪಟ್ಟಿಯೇ ಇದೆ. ಹಳ್ಳಿ, ಪಟ್ಟಣ, ನಗರಗಳೆನ್ನದೇ ಬೇಸಿಗೆ ಶಿಬಿರಗಳು ಸಂಸ್ಕೃತಿಯ ಸಮೃದ್ಧತೆಯನ್ನು ಮಕ್ಕಳಿಗೆ ಉಣ ಬಡಿಸುತ್ತಿದ್ದವು. ಮಕ್ಕಳಿಗೆ ಅಭಿನಯ, ಸಂಗೀತ, ಅಜ್ಜಿಹೇಳುವ ಕಥೆ, ಚಿತ್ರಕಲೆ ಕಲಿಕೆ ಹೀಗೆ ಹೊಸತನದ ಸೃಜನಶೀಲತೆಗಳಿಗೆ ಮಕ್ಕಳನ್ನು ಸಿದ್ಧಗೊಳಿಸುವ ಎಲ್ಲಕ್ಕೂ ಕೊರೊನಾ ಕಲ್ಲು ಬಿದ್ದಿದೆ. ಸರಕಾರದ ರಂಗಾಯಣಗಳು ಮಕ್ಕಳಿಗೆ ಬೇಸಿಗೆ ಶಿಬಿರಗಳನ್ನು ನಡೆಸುತ್ತಿದ್ದವು. ಖಾಸಗಿಯಾಗಿ ಸಂಘ ಸಂಸ್ಥೆಗಳು ಅಲ್ಲಲ್ಲಿ ಜರುಗಿಸುತ್ತಿದ್ದ ಇಂತಹ ನೂರಾರು ಶಿಬಿರಗಳು ಸಂಸ್ಕೃತಿಯ ವಿವಿಧ ಮಜಲುಗಳ ಬೃಹತ್ ಕಾರ್ಯಾಗಾರ, ಕಮ್ಮಟ, ಸಮಾವೇಶಗಳು ನಾಡಿನ ಸಂಸ್ಕೃತಿ ಬಿಂಬಿಸುವ ಅವಕಾಶಗಳಾಗಿದ್ದವು. ಅಲ್ಲದೇ ಸರಕಾರದ ಹತ್ತು ಹಲವು ಸಂಸ್ಕೃತಿ ಉತ್ಸವಗಳು ಜರುಗುತ್ತಿದ್ದವು. ಅವೆಲ್ಲವುಗಳನ್ನು ಕೊರೊನಾ ಎಂಬ ಕರಾಳ ಕಾಳಿ ನುಂಗಿ ನೊಣೆಯುತ್ತಿದೆ. ಲಾಕ್ ಡೌನ್ ಮತ್ತು ಸೀಲ್ ಡೌನ್ ಗಳಿಂದ ಸಾಂಸ್ಕೃತಿಕ ಲೋಕವಿರಲಿ ಸಾಮಾನ್ಯ ಜನಜೀವನ ಸಹಜಸ್ಥಿತಿಗೆ ಮತ್ತೆ ಮರುಳತ್ತದೆಯಾ.? ಮತ್ತೆ ಕಾಣಬಲ್ಲೆವೇ ಆ ದಿನಗಳನು ಎಂಬ ಸಹಸ್ರಮಾನದ ನಿರೀಕ್ಷೆ ನಿತ್ಯವೂ ನಮ್ಮೆಲ್ಲರನ್ನು ಕಾಡುತ್ತಿದೆ. ***********

ಪ್ರಸ್ತುತ Read Post »

ಇತರೆ, ಜೀವನ

ಪ್ರಸ್ತುತ

ಸಂವಾದ ಜ್ಯೋತಿ ಡಿ.ಬೊಮ್ಮಾ. ಹೌದು ಪಾಶ್ಚಾತ್ಯ ಸಂಸ್ಕೃತಿಯೆ ಚನ್ನ ಒತ್ತಾಯದ ಬದುಕು ಅವರಾರು ಬದುಕರು ಹೊಂದಾಣಿಕೆಯ ಪ್ರಯತ್ನವೇ ಮಾಡರವರು ನಮ್ಮಂತಲ್ಲ ಒಳಗೊಂದು ಹೊರಗೊಂದು ಇಷ್ಟವಿಲ್ಲದವನ/ಳೊಂದಿಗೆ ಏಗುವ ರಗಳೆ ಕುಡಿದು ಪೀಡಿಸುವ ಗಂಡನೊಡನೆ ಸಹಬಾಳ್ವೆ ಇಲ್ಲಿ ಮಕ್ಕಳಾಗದಿದ್ದರು ತಾನೆ ತಪಿತಸ್ಥಳು ಲೋಕಕ್ಕೆ ಅವನು ಗಂಡಸು..ಅವನಲ್ಲೆನು ಕೊರತೆ..! ಮಕ್ಕಳಾದ ಮೇಲೆ ಇನ್ನೆನಿದೆ. ಅನುಸರಿಸಿಕೊಂಡು ಹೋಗುವದೊಂದೆ. ಅವರಾದರೂ ಎಲ್ಲಿರುತ್ತಾರೆ ಕೊನೆವರೆಗೆ ನಮ್ಮವರಾಗಿ..! ಬಿಟ್ಟು ಬಿಡುವದೊಳಿತು ಮನಸ್ಸಿಗೊಪ್ಪದು ಸುಮ್ಮನಿರು ,ಮಾತು ಬೇರೆ  ಆತ್ಮ ಬೇರೆ ಎರಡು ಒಂದಾಗಬೇಕಾದರೆ ತೆರೆ ಸರಿಸಿ ಬದುಕಬೇಕು. ಬಯಸಿ ದೊರಕಿಸಿಕೊಂಡದ್ದು ಹಳತಾಗದೆ..! ಹಾಗಂತ ಹೊಂದಾಣಿಕೆಯಲ್ಲೆ ಬದುಕಬೇಕೆ.. ದೇವತೆಗಳ ನೆಲೆವೀಡು ನಮ್ಮ ನಾಡು ಸುಸಂಸ್ಕತಿ ಉಳ್ಳದ್ದು. ಪುರುಷ ದೇವರೆಲ್ಲ ಬಹುಪತ್ನಿತ್ವ ಸ್ಥರೆ ಶ್..ಕದ್ದು ಕೇಳುವ ಕಿವಿಗಳಿವೆ ಇಲ್ಲಿ. ಕದ್ದು ಏನು ಮಾಡಿದರು ನಡೆಯಬಹುದಿಲ್ಲಿ.. ಇರುವದನ್ನೆ ಒಪ್ಪಿಕೊಂಡರು ಬದುಕಿದರಾಗದೆ..? ನೀವು ಬುದ್ದಿ ಜೀವಿಗಳು ,ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತಾಡುವವರು.. ಎಡ ಬಲವೆಂದು ಎಗ್ಗಿಲ್ಲದೆ ಬಡಿದಾಡುವ ಗೊಡ್ಡು ವಾದಿಗಳು.. ನೈಜತೆ ಮರೆಮಾಚಿ ಕಲ್ಪನೆಯಲ್ಲಿ ಬದುಕುವರು.. ಯಾಕೋ..ಅಲ್ಲಗಳೆಯಲಾಗಲಿಲ್ಲ.           **********

ಪ್ರಸ್ತುತ Read Post »

ಇತರೆ, ಜೀವನ

ಪ್ರಸ್ತುತ

ಮಕ್ಕಳ ಆಯ್ಕೆಯಲ್ಲಿ ನಂಬಿಕೆ ಏಕಿಲ್ಲ….? ಅನಿತ.ಕೆ.ಬಿ.   ವಿವಾಹವೆಂಬುದು ನಮ್ಮ ಸಮಾಜದಲ್ಲಿ ಕಂಡುಬರುವಂತಹ ಒಂದು ಸಂಸ್ಥೆ. ಗಂಡಿಗೆ ಹೆಣ್ಣು,ಹೆಣ್ಣಿಗೆ ಗಂಡು ಆಸರೆಯಾಗಿರುತ್ತಾರೆಂಬ ನಂಬಿಕೆಯಿಂದ ವಿವಾಹ ಅವಶ್ಶಕ ಹಾಗೂ ಅನಿವಾರ್ಯ. ಮದುವೆಯನ್ನು ಪುರಾಣಗಳ ಕಾಲದಲ್ಲಿ ಸ್ವಯಂವರ ರೀತಿ ನಡೆಸಲಾಗಿದೆ.    ಹಾಗದರೆ ಮದುವೆ ಎಂದರೇನು…? ಎಂಬ ಪ್ರಶ್ನೆಗೆ ಸಮಾಜಶಾಸ್ತ್ರಜ್ಞರಲ್ಲಿ ಒಬ್ಬರಾದ ಮ್ಶಾಲಿನೊಸ್ಕಿರವರು “ಸ್ತ್ರೀ-ಪುರುಷರ ನಡುವೆ ಲೈಂಗಿಕ ಹಾಗೂ ಮಾನಸಿಕ ಸಂಬಂಧವನ್ನ ದೃಢಪಡಿಸುವ ಮತ್ತು ಸಂತಾನೋತ್ಪತ್ತಿಗಾಗಿ ಉದ್ದೇಶಪೂರ್ವಕವಾಗಿ ಏರ್ಪಡಿಸುವ ಒಪ್ಪಂದ” ಎಂದಿದ್ದಾರೆ.     ಮದುವೆ ಇಲ್ಲದೆ ಜೀವನ ನಡೆಸಲು ಸಾಧ್ಶವಿಲ್ಲವೇ? ಯಾಕಿಲ್ಲ,ಎಷ್ಟೋ ಮಂದಿ ತಮ್ಮ ಉದ್ದೇಶಕ್ಕಾಗಿ ವಿವಾಹವಾಗದೇ ಉಳಿದಿದ್ದಾರೆ. ಆದರೆ ಯಾರೋ ಒಬ್ಬ ವಿವೇಕಾನಂದ,ಎಲ್ಲೊ ಒಬ್ಬ ಕಲಾಂ, ಮೋದಿಯಂತವರೇ ಹೊರತು ನಮ್ಮ ಅಣ್ಣ-ತಮ್ಮ,ಅಕ್ಕ-ತಂಗಿಯರಂತು ಅಲ್ಲವೇ ಅಲ್ಲ..! ವಿವಾಹವಿಲ್ಲದೆ ಮೋಕ್ಷವಿಲ್ಲ ಎಂಬುದು ಹಿಂದೂಗಳ ನಂಬಿಕೆ ಹಾಗಾಗಿ ವಿವಾಹ ಅನಿವಾರ್ಯ. ಮದುವೆ ಎಂಬುದು ಬಂಧನವೇ? ಅಲ್ಲವೇ ಅಲ್ಲ. ಇದು ಎರಡು ಜೀವಗಳನ್ನ ಹತ್ತಿರ ತಂದು ಜೀವನವಿಡೀ ಒಂದಾಗಿ ಬಾಳಬೇಕೆಂದು ಹರಸುವಂತಹ ಒಂದು ವಿಧಿ. ವಿವಾಹದ ಕುರಿತು ಹೆಣ್ಣು-ಗಂಡುಗಳಲ್ಲಿ ಹತ್ತಾರು ಕನಸುಗಳಿರುತ್ತವೆ,ಮಾತ್ರವಲ್ಲ ಹಲವರು ತಮ್ಮ ಸಂಗಾತಿಯನ್ನ ಆಯ್ಕೆ ಮಾಡಿಕೊಂಡಿರುತ್ತಾರೆ. ಇದಕ್ಕೆ ವಿರುದ್ಧವಾದ ಸಂದರ್ಭ ಸೃಷ್ಠಿಗೊಂಡಾಗ ಮಾತ್ರ ವಿವಾಹ ಬಂಧನವಾಗುತ್ತದೆ.     ಹೌದು ಮದ್ವೆ ಒಂದೆರಡು ದಿನದ ಜವಾಬ್ದಾರಿಯಲ್ಲ, ಒಂದೆರಡು ದಿನದ ಸಂಭ್ರಮವಲ್ಲ. ಅಂದೊಂದು ಪವಿತ್ರ ಬಂಧ. ಒಂದೆರಡು ದಿನದ ಸಂಭ್ರಮ ಮುಗಿಸಿಹೋಗುವವರು ನೀವಾದರೆ, ಅವರು ಜೀವನದ ಕೊನೆಯ ಪಯಣದವರೆಗೂ ವಿವಾಹವಾದವರೊಡನೆ ನಡೆಯುವವರಾಗಿರುತ್ತಾರೆ. ಹಾಗಾಗಿ ಯಾರೋ ನೊಡುವ ಹೆಣ್ಣು-ಗಂಡನ್ನು ನಂಬುವ ನೀವೂ ನಿಮ್ಮ ಕೈಬೆರಳ ಹಿಡಿದು ಜೊತೆ ಜೊತೆ ಸಾಗಿ ಬಂದ ನಿಮ್ಮ ಮಕ್ಕಳ ಆಯ್ಕೆಯಲ್ಲಿ ನಂಬಿಕೆ ಏಕಿಲ್ಲ…? ಅವರ ಅಭಿಪ್ರಾಯಕ್ಕೂ ಮನ್ನಣೆ ಕೊಡಿ. ನೀವು ಪ್ರತಿನಿತ್ಶ ಪೂಜಿಸುವ ಆ ನಿಮ್ಮ ದೇವರುಗಳು ಕೂಡ ಸಂಗಾತಿಗಳನ್ನ ಆಯ್ಕೆಯಾಗೆ ತಾನೇ ವಿವಾಹವಾಗಿರುವುದು.    ಹೌದು ನಾವು ಸಮಾಜದ ಹೊರತಾಗಿ ಬದುಕಲು ಸಾಧ್ಶವಿಲ್ಲ. ಹಾಗಂತ ಸಮಾಜಕ್ಕಾಗಿ ಬದುಕುವುದು ಸರಿಯೇ?. ಸಂಗಾತಿಯನ್ನ ಆಯ್ಕೆ ಮಾಡಿಕೊಂಡ ಮಾತ್ರಕ್ಕೆ ಸಮಾಜ ಹದಗೆಡುವುದೇ? **********

ಪ್ರಸ್ತುತ Read Post »

You cannot copy content of this page

Scroll to Top