ಆ ಕಾಲವೊಂದಿತ್ತು..
ದೇವಯಾನಿ ಬರೆಯುತ್ತಾರೆ—
ಬರೆಯಬೇಕು , ಬರೆದುದನು ಸಂಭ್ರಮಿಸಬೇಕು ನಿಜ .ಆದರೆ ಬರವಣಿಗೆ ಮಾಗುವವರೆಗೂ ತಾಳ್ಮೆಯಿಂದ ಕಾಯಬೇಕು…
ದೇವಯಾನಿ ಬರೆಯುತ್ತಾರೆ—
ಬರೆಯಬೇಕು , ಬರೆದುದನು ಸಂಭ್ರಮಿಸಬೇಕು ನಿಜ .ಆದರೆ ಬರವಣಿಗೆ ಮಾಗುವವರೆಗೂ ತಾಳ್ಮೆಯಿಂದ ಕಾಯಬೇಕು…
ಮೌನಮೇಲನೋಯಿ ಈ ಮರಪುರಾನಿ ರೇಯಿ
ಎದೆಲೋ ವೆನ್ನೆಲ ಕಲಿಗೇ ಕನ್ನುಲ
ತಾರಾಡೆ ಹಾಯಿಲಾ.
( ಮೌನವೇ ಹಿರಿದೆನಗೆ,
ಮರೆಯಲಾಗದೀ ರಾತ್ರಿ
ಮನ ಹೀರುವ ,ಬೆಳದಿಂಗಳು
ಕಂಗಳಲ್ಲಿ ಸೂಸುತಿರೆ,
ತೂರಾಡುವೆ ಹಾಯಾಗಿ ) .
ಭಾವಲಹರಿ. ಎದಿಹಿಗ್ಗು ಕಡೆತನಕ. ರಶ್ಮಿ .ಎಸ್. ಅಳಬಾರ್ದು ಅಂತ ನಿರ್ಧಾರ ಮಾಡೇನಿ ಅಕ್ಕ. ಆಮ್ಯಾಲೆ ಕಣ್ಣೀರು ತಂದಿಲ್ಲ. ಕಂಠ ಮೀರಿ ದುಖ್ಖಿಸಿಲ್ಲ. ಬಿಕ್ಕಿಲ್ಲ’. ‘ತ್ರಾಸು ಆಗ್ತದ. ಆದ್ರ ಅಳೂದ್ರಿಂದ ಸಂದರ್ಭ ಇರೂದಕ್ಕಿಂತ ಬ್ಯಾರೆ ಏನಾಗೂದಿಲ್ಲ. ಇಡೀ ಪರಿಸ್ಥಿತಿಯನ್ನಂತೂ ಬದಲಸಾಕ ಆಗೂದಿಲ್ಲ. ಅದಕ್ಕೆ ಅಳಬಾರ್ದು ಅಂತ ಮಾಡೇನಿ’. ನಮ್ಮ ಚಿಗವ್ವ ನಮ್ಮಮ್ಮಗ ಹೇಳ್ತಿದ್ಲು. ಮನಿ ಹಿತ್ತಲದಾಗ ಬೇವಿನ ಮರಕ್ಕ ಕಟ್ಟಿದ್ದ ಜೋಕಾಲಿಯೊಳಗ ತೂಗಕೊಂತ ಕುಂತ ಚಿಕ್ಕಮ್ಮ ಆಗಲೇ ೫ ದಶಕ ನೋಡ್ದಕ್ಕಿ. ನಮ್ಮಮ್ಮ ೬. ಬ್ಯಾಸಗಿ ಝಳ ತಾಕಲಾರ್ದ ಹಂಗ ಅಪ್ಪ ಹಿತ್ತಲದಾಗ ತೋಟ ಮಾಡ್ಯಾರ. ಅಲ್ಲಿ ತಣ್ಣಗೆ ಕುತ್ಗೊಂಡು ಕಷ್ಟ ಸುಖ ಮಾತಾಡೂ ಮುಂದ ನಾವು ಮಕ್ಕಳು ಇಬ್ಬರ ಮುಖ ಮಿಕಮಿಕ ನೋಡ್ಕೊಂತ ಸುಮ್ನಾಗಿದ್ವಿ. ಮೈ ಇಡೀ ಕಣ್ಣಾಗಿದ್ವು. ಕಿವಿಯಾಗಿದ್ವು. ಅಕ್ಕ–ತಂಗಿ ಇಬ್ರೂ ಕಷ್ಟ ಉಂಡು ಗಟ್ಟಿಯಾದೋರು. ಅಮ್ಮ ಅತ್ತು ಹಗುರಾಗ್ತೀನಿ ಅಂತಂದ್ರ, ಅತ್ರ ಮಂದಿಮುಂದ ಹಗುರಾಗ್ತೀವಿ ಅನ್ನೂ ನಂಬಿಕಿ ತಂಗೀದು. ಭಾಳ ತ್ರಾಸ ಆದ್ರ ಕಣ್ಣೀರಿನ ಮುತ್ತು ಗಲ್ಲಗುಂಟ ಇಳೀತಾವ. ಮುತ್ತಿನ ಮಣಿಯಂಥ ಬಣ್ಣ ನಮ್ಮ ಚಿಗ್ಗವ್ವಂದು. ಹಾಲಿನ ಕೆನಿ ಮ್ಯಾಲೆ ಹಬೆ ಇಬ್ಬನಿ ಕುಂತಂಗ ಕಾಣ್ತದ ಅವಾಗ. ಚಿಕ್ಕಮ್ಮ ಮಾತು ಮುಂದುವರಿಸಿದ್ರು. ‘ಅಳೂದಂದ್ರ ಏನು? ನಾವು ನಮ್ಮ ದೌರ್ಬಲ್ಯವನ್ನು ತೋರಸೂದು. ನಾವು ನಂಬಿದ್ದು ಎಲ್ಲೊ ಖೊಟ್ಟಿ ಆಗೇದ ಅಂತ ತ್ರಾಸ ಮಾಡ್ಕೊಳ್ಳೂದು. ನಂಬಿದೆದಿಗೆ ಕಾಲ ನೀಡೂ ಪೆಟ್ಟು. ಅದು ಯಾವಾಗಲೂ ಎದಿ ಮುರದು ಬಿರದು ಬರೂಹಂಗ ಇರ್ತದ. ಈ ದುಃಖ್ಖದ್ದ ಕಟ್ಟಿ ಮುರದು ಬರೂವ ನೀರೆ ಕಣ್ಣೀರು. ಅವಕ್ಕೂ ಗಟ್ಟಿಯಾಗಬೇಕು. ಕಲ್ಲಾಗಬೇಕು. ಮನಸು ಹೂ ಕಲ್ಲಾಗಬೇಕು. ಅಂದ್ರ ಸಂತೋಷ ಆದಾಗ ಹೂವಿನ್ಹಂಗ ಅರಳೂದು. ನೋವು ಬಂದ್ರ ಕಲ್ಲಿನ್ಹಂಗ ಗಟ್ಟಿಯಾಗೂದು ಅಷ್ಟೆ. ನಾವು ಅಳೂದ್ರಿಂದ ಏನಾಗ್ತದ? ಇಷ್ಟಕ್ಕೂ ನಮ್ಮ ತ್ರಾಸೇ ದೊಡ್ದು ಅಂದ್ಕೊಂಡಾಗ ಅಳ್ತೀವಿ. ನಮಗ ಎದುರಸಾಕ ಆಗ್ದೇ ಇರೂದು ಯಾವುದೂ ನಮ್ಮ ಜೀವನದಾಗ ಘಟಿಸಾಕ ಸಾಧ್ಯನೇ ಇಲ್ಲ. ಇದು ನಮ್ಮ ಜೀವನದೊಳಗ ಆಗೇದ ಅಂದ್ರ, ಅದಕ್ಕ ನಾವು ಲಾಯಕ್ಕದೀವಿ. ಅದನ್ನು ಎದುರಿಸುವ, ನಿಭಾಯಿಸುವ ಛಾತಿ ನಮಗದ ಅಂತನೇ ಅರ್ಥ. ಹಂಗಿದ್ದಾಗ ಕಣ್ಣೀರು ಸುರಿಸಿ, ಸ್ವಮರುಕದ ಬಾವಿಯೊಳಗ ನಮ್ಮನ್ನೇ ನಾವು ದೂಡಬೇಕು ಯಾಕ?’ ಇಬ್ಬರೂ ಅಕ್ಕಾ ತಂಗೇರು ಹತ್ತು ವರ್ಷದ ನಂತರ ಮಾತಾಡಾಕ ಕುಂತಿದ್ರು. ಅಳಾಕ, ನಗಾಕ ಎರಡಕ್ಕೂ ರಾಶಿ ರಾಶಿ ಮಾತುಗಳಿದ್ವು. ಇವರ ಸಾಲಿಗೆ ದೊಡ್ಡಮ್ಮನೂ ಸೇರ್ಕೊಂಡರ ಅಲ್ಲೊಂದು ಬದುಕಿನ ಪಡಸಾಲಿನ ಬಿಚ್ಕೊಂತದ. ಅವರು ಸೀರಿ ತೊಗೊಂಡ ಲೆಕ್ಕದಿಂದ ಶುರು ಆಗುವ ಮಾತು, ದೇವರಿಗೆ ಒಂದು ಕೈ ನೋಡ್ಕೊಳ್ಳೂತನಾನೂ ಹೋಗ್ತದ. ಅವರಿಬ್ಬರ ನಡು ನಾನು ಬಾಯಿ ಹಾಕಿದ್ದೆ. ‘ಯಾರರೆ ಅನುಮಾನಿಸ್ದಾಗ, ಅವಮಾನ ಮಾಡ್ದಾಗ, ನಿರ್ಲಕ್ಷ್ಯ ಮಾಡ್ದಾಗ, ನಮ್ಮ ಇರುವನ್ನು ಅಲ್ಲಗಳೆದಾಗ ಮಾತ್ರ ಅಳು ಉಕ್ಕಿ ಬರ್ತದ. ಅದನ್ನು ತಡ್ಯಾಕ ಆಗಾಂಗಿಲ್ಲ. ನೀನೂ ಕಾಕಾರೂ ೩೫ ವರ್ಷಾ ಸಂಸಾರ ಮಾಡೇರಿ. ಈಗ ಹಿಂಗ ಹೇಳ್ತಿ. ನೀ ಖರೆ ಹೇಳು ಮದಿವಿಯಾದ ಹೊಸತರೊಳಗ ಅತ್ತಿಲ್ಲೇನು?’ ಚಿಕ್ಕಮ್ಮ ಸುಮ್ಮನಾಗಿದ್ಲು. ಅಳು ಬರ್ತಿತ್ತೇನೋ? ಇಲ್ಲ. ಒಮ್ಮೆ ನಮ್ಮನಿ ಮಾವಿನ ಗಿಡ ದಿಟ್ಟಿಸಿ ನೋಡ್ದಕ್ಕಿನ, ‘ನೋಡಲ್ಲೆ, ಆ ದೊಡ್ಡ ಮಾವಿನ ಕಾಯಿನ ಎಲಿ ಹೆಂಗ ಮರೀ ಮಾಡ್ಯಾವು ನೋಡು… ಎಷ್ಟು ಮಂಗ್ಯಾ ಬಂದ್ರೂ ಕಂಡಿಲ್ಲದು’ ಅಂದ್ರು. ಅಂಗಳದಾಗ ನಿಂತು ಹಿಸಿಕಿ ಕೊಟ್ಟ ಹಣ್ಣು, ಕಣ್ಮುಚ್ಚಿ ಹೀರ್್ಕೊಂತ ನಿಂತ ನನಗ ಆ ಕಾಯಿ, ಎಲಿ, ಮಂಗ್ಯಾ ಯಾವೂ ಕಾಣವಲ್ದಾಗಿತ್ತು. ನಾನು ಚಿಕ್ಕಮ್ಮನಿಗೆ ಸವಾಲು ಹಾಕೇನಿ ಅನ್ನೂ ಮದದೊಳಗ ರಸ ಹೀರ್ತಿದ್ದೆ. ‘ಮನಸು ಹಂಗೆ. ಕೆಲವೊಮ್ಮೆ ಹುಡುಕಿ ಹೆಕ್ಕಿ, ಹಣ್ಣು ಕಿತ್ತೊಗಿಯೂ ಮಂಗ್ಯಾನ್ಹಂಗ. ಇನ್ನೂ ಕೆಲವೊಮ್ಮೆ ಯಾರ ಕಣ್ಣಿಗೂ ಕಾಣದೇ ಇರೂಹಂಗ ಬೆಚ್ಚಗೆ ಕಾಪಿಡುವ ಎಲಿ ಇದ್ಹಂಗ. ಇದು ಕಡೀಕ ಕೇಳೂದು ನಮ್ಮ ಮಾತು ಮಾತ್ರ. ಎಲ್ಲಿ ಮಂಗ್ಯಾ ಆಗಬೇಕು? ಎಲ್ಲಿ ಮನಶಾ ಆಗಬೇಕು ಅನ್ನೂ ನಿರ್ಧಾರ ನಮ್ಮದೇ ಆಗಿರ್ಬೇಕು. ಅಳ್ತಿದ್ದೆ. ನಮ್ಮತ್ತಿ ಎಲ್ಲಾ ಹೆಣ್ಣ ಹಡದಿಯಲ್ಲಬೇ ಅಂತ ಹಂಗಿಸಿದಾಗೆಲ್ಲ ಅಳ್ತಿದ್ದೆ. ಹಿಂಗೆ ಒಮ್ಮೆ ಅತ್ತು ಅತ್ತು ಹೈರಾಣಾದಾಗ ಅನಿಸಿದ್ದು ಅತ್ರೇನು ಮಕ್ಕಳು ಗಂಡಾಗ್ತಾವ? ಇಲ್ಲ. ಅತ್ತೇನು ಪ್ರಯೋಜನ? ದೇವರು ಹೆಣ್ಣು ಕೊಟ್ಟಾನ. ನಮಗೂ ಅಂಥಾ ಹೆಣ್ಣು ಕೊಡಲಿಲ್ಲ ಅಲ್ಲ ಅಂತ ಮಂದಿ ಕರಬೂಹಂಗ ಮಕ್ಕಳನ್ನ ಬೆಳಸ್ತೀನಿ ಅಂತ ನಿರ್ಧಾರ ಮಾಡ್ದೆ. ಯಾವ ಕಾರಣಕ್ಕೂ ಅಳೂದಿಲ್ಲ. ದೇವರು ನಾ ಅತ್ತೂ ಕರದು ಮಾಡ್ಲಿ ಅನ್ನೂವಂಥ ಸಂದರ್ಭ ತಂದಾಗೂ ಕಲ್ಲಾಗಿದ್ದೆ. ಇದು ಜಿದ್ದು. ದೇವರ ಮ್ಯಾಲಿನ ಜಿದ್ದು. ಈ ಜಿದ್ದಿನಿಂದ ಇನ್ನೊಬ್ಬರಿಗೆ ತ್ರಾಸಂತೂ ಇಲ್ಲಲ್ಲ. ಆಮೇಲೆ ನಿಮ್ಮಣ್ಣ ಹುಟ್ದಾ. ಆ ಮಾತು ಬ್ಯಾರೆ. ಆದ್ರ ಇವೊತ್ತಿಗೂ ಅಳಬಾರದು ಅನ್ನೂ ನಿರ್ಧಾರ ಗಟ್ಟಿಯಾಗಿಯೇ ಉಳದದ. ಇದು ನಮ್ಮೊಳಗಿನ ಬೆಳಕು. ಅದು ನಮಗೇ ಕಾಣಬೇಕು. ನಮ್ಮ ಜೀವನಾನ ತೋರಬೇಕು. ಮುಂದ ಅಳಬೇಕು ಅನ್ನಸ್ದಾಗಲೆಲ್ಲ ಬೇಂದ್ರೆ ಅಜ್ಜನ ಪದಗಳು ನನಗ ಗಟ್ಟಿಯಾದ್ವು. ರೊಟ್ಟಿ ಬಡ್ಕೊಂತ ‘ನನ್ನ ಕೈ ಹಿಡಿದಾಕೆ ಅಳುನುಂಗಿ ನಗು ಒಮ್ಮೆ, ನಾನೂನು ನಕ್ಕೇನ’ ಹಾಡು ಹಾಡ್ತಿದ್ರ ರೊಟ್ಟಿ ತೆಳು ಆಗ್ತಿದ್ವು. ಮನಸೂ ತಿಳಿ ಆಗ್ತಿತ್ತು. ತೀರ ಅಂಥ ಸಂದರ್ಭ ಬಂದ್ರ, ನೀನು ಇದನ್ನ ಮನನ ಮಾಡ್ಕೊ. ‘ಹುಸಿ ನಗುತ ಬಂದೇವ, ನಸುನಗುತ ಬಾಳೋಣ, ತುಸು ನಗುತ ತೆರಳೋಣ’ ‘ಬಡತನ ಗಿಡತನ ಕಡೆತನಕುಳಿದಾವೇನ, ಎದೆಹಿಗ್ಗು ಕಡೆ ಮಟ್ಟ, ಬಾಳಿನ ಕಡಲಾಗ ಅದನ ಮುಳುಗಿಸಬ್ಯಾಡ, ಕಡೆಗೋಲು ಹಿಡಿ ಹುಟ್ಟ’ ಅಂತ ಹಾಡಾಕ ಸುರು ಮಾಡಿದ್ರು. ಮೊದಲಾದ್ರ ಇವರ ಚಿತ್ರಹಾರ್ ಮುಗಿಯೂದಿಲ್ಲ ಅಂತ ಮೂಗುಮುರಿಯೂ ಮಕ್ಕಳು ಅವೊತ್ತು ಸುಮ್ನ ಕೇಳಿರಲಿಲ್ಲ. ಕೇಳಿ ಸುಮ್ನ ಆಗಲೂ ಇಲ್ಲ. ‘ಗಂಡ ಅಂತಾನಂತ ಅತ್ಗೊಂತ ಕುಂತ್ರ, ಸಿಟ್ಟಿಗೆದ್ರ ಬದುಕು ಮೂರಾಬಟ್ಟಿ ಆಗ್ತದ. ಕಟ್ಗೊಂಡ ಗಂಡ ಪೂರ್ವಜನ್ಮದ ಮಗಾ ಅಂತ ತಿಳ್ಕೊಂಡು ಕ್ಷಮಿಸ್ಕೊಂತ ಹೋಗಬೇಕು. ಅವರೂ ಅಷ್ಟೆ. ಕಟ್ಗೊಂಡು ಹೆಂಡ್ತಿ, ಮಗಳಿದ್ಹಂಗ ಅನ್ನೂ ಮಮಕಾರ ಬೆಳಸ್ಕೊಂಡ್ರ ಜಗಳ ಕಡಿಮಿ ಆಗ್ತಾವ. ಎದಿಹಿಗ್ಗು ಉಳದೇ ಉಳೀತದ… ಇವೆಲ್ಲ ಕಾಲ ಮಾಗಿದ್ಹಂಗ, ಪ್ರೀತಿ ಗಟ್ಟಿ ಆದ್ಹಂಗ ಬರ್ತದ. ಈಗೀಗ ನೀವು ಪ್ರೀತಿ ಬಲಿಯಾಕೆ ಬಿಡೂದಿಲ್ಲ. ಪ್ರೇಮದ ಕಾವು ಇಳಿಯೂ ಮುನ್ನ, ಪ್ರೇಮದ ಪೂರ ಕಡಿಮಿ ಆಗಿ, ನದಿ ಹೊಳಿ ಹರಿಯೂ ಮೊದಲೇ ದಾರಿ ಬ್ಯಾರೆ ಅನ್ನೂಹಂಗ ಜಗಳಾಡ್ತೀರಿ. ಕಾದು ನೋಡ್ರಿ. ‘ಜಗಳ ಕಾಯ್ದು’ ಅಲ್ಲ‘ ಅಂತಹೇಳಿ ಸುಮ್ನಾಗಿದ್ರು. ಈ ‘ಎದಿಹಿಗ್ಗು ಕಡೆತನಕ’ ಅನ್ನೂ ಪದ, ಹಸಿ ಗೋಡಿಯೊಳಗ ಹಳ್ಳ ನೆಟ್ಟಂಗ ಗುರಿ ಮುಟ್ಟಿತ್ತು. ಅನ್ನೋರು ಅಂತಾರ. ಆಡ್ಕೊಳ್ಳೋರು ಆಡ್ಕೊಂತಾರ. ನಮ್ಮ ಎದಿ ಹಿಗ್ಗು ನಮಗಿದ್ರ ಯಾವ ನೋವು ಎಷ್ಟು ಹೊತ್ತಿನ ಅತಿಥಿ? ಸದಾ ಕಣ್ಣೀರೊಳಗ ತೇಲೂ ನನಗ ಇದು ಪಾಠ ಆಗಿತ್ತು. ಆದ್ರ ಗಟ್ಟಿಯಾಗೂದು, ಗಟ್ಟಿ ಮಾಡೂದು ಅವರಿವರ ಮಾತಲ್ಲ. ನಮ್ಮ ಬದುಕು. ****************************************
ಕವಿತೆ ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್ ಸ್ಮಿತಾ ಭಟ್ ವರ್ಷವೊಂದು ಗತಿಸಿ ಹೋಯಿತಲ್ಲ, ಎಂದು ಅಂತರ್ಮುಖಿಯಾಗಿ ಯೋಚಿಸುತ್ತಾ ಖಾಲಿ ಗೋಡೆಯತ್ತ ತದೇಕಚಿತ್ತದಿಂದ ನೋಡುತ್ತಿದ್ದೆ. ತನ್ನ ಅಸ್ತಿತ್ವವನ್ನು ನೆನಪಿಸುವಂತೆ, ತೂಗುಹಾಕಿದ ಕ್ಯಾಲೆಂಡರ್ ಗಾಳಿಗೆ ಹಾರುತ್ತಾ ಪರ ಪರ ಸದ್ದು ಮಾಡಿತು ಅದು ಏನನ್ನೋ ಹೇಳುತ್ತಿರುವಂತೆ ಭಾಸವಾಗುತ್ತಿತ್ತು. ಬೀಸುವ ಗಾಳಿಗೆ ಉದುರಿ ಬಿದ್ದಾವು ಎಂದು,ಬರುತ್ತಿದ್ದ ಗಾಳಿಯನ್ನು ತಡೆಯಲು ಎದ್ದು ಕಿಟಕಿಯ ಕದವನ್ನು ಎಳೆದೆ. ಆಗಲೂ ಕ್ಯಾಲೆಂಡರ್ ನದು ಮತ್ತದೇ ಸದ್ದು. ಆಗಲೇ ನಾನು ಗಮನಿಸಿದ್ದು ನವೆಂಬರ್ ತಿಂಗಳಿನಲ್ಲಿಯೇ ನಿಂತು ತನ್ನ ದಯನೀಯ ಸ್ಥಿತಿಯನ್ನು ಹೇಳುತ್ತಿರುವಂತೆ ಭಾಸವಾಯಿತು. ಈ ನಡುವೆ ನಾನು ಗಮನಿಸಿಯೇ ಇರಲಿಲ್ಲ. ಭಾವದೊಳಗೆ ನಡೆದ ನೋವಿನ ಸಂಗತಿಗಳು ಸಂಪೂರ್ಣ ದಿನಚರಿಯನ್ನು ಅದಲು-ಬದಲು ಮಾಡಿತ್ತು. ಕೆಟ್ಟ ಗಡಿಯಾರ ಮತ್ತು ತಿರುಗಿಸಿ ಇರದ ಕ್ಯಾಲೆಂಡರ್ ಮನೆಯ ಗೋಡೆಯ ಮೇಲೆ ಯಾವತ್ತೂ ಇರಬಾರದು. ಅದು ಇದೆ ಅಂತಾದರೆ ಆ ಮನೆಯ ದಿನಚರಿ ಸರಿ ಇಲ್ಲ ಅಂತಲೇ ಅರ್ಥ. ಎನ್ನುವ ಅಪ್ಪನ ಮಾತು ತಕ್ಷಣ ನೆನಪಾಯಿತು. ನನ್ನ ಭಾವ ಕೂಡಾ ಅದಕ್ಕೆ ಪುಷ್ಟಿ ಕೊಡುತ್ತಿತ್ತು. ಎದ್ದು ಹೋಗಿ ಕ್ಯಾಲೆಂಡರನ್ನು ತಿರುವಿಹಾಕಿದೆ. ಇನ್ನು ಮೂರೇ ದಿನ ಇರುವುದು ಈ ಕ್ಯಾಲೆಂಡರಿನ ಅಸ್ತಿತ್ವ ಮುಗಿಯಲು. ಅಯ್ಯೋ ಪಾಪ ಅನ್ನಿಸಿ ಕ್ಯಾಲೆಂಡರ್ ಅನ್ನು ಸವರುತ್ತಾ ಕುಳಿತೆ. ಎಷ್ಟೊಂದು ನೋವುಗಳನ್ನು ಹೊತ್ತು ತಂದಿದ್ದೆ ನೀನು.ಸಾವು-ನೋವು,ರೋಗ,ಪ್ರವಾಹ, ಒಂದಾ ಎರಡಾ, ಮನುಕುಲಕ್ಕೆ ಅತಿ ತ್ರಾಸದಾಯಕವಾದ ವರ್ಷ ಅನ್ನಬಹುದು. ನೀನು ಕೊಟ್ಟ ನೋವಿನಿಂದ ನಿನ್ನ ಕಾಲ ಇತಿಹಾಸದಲ್ಲಿ ಕಹಿ ಭಾವದಿಂದ ನೆನಪಿರುವಂತಹ ವರ್ಷವಾಗುತ್ತದೆ ಅಂದೆ. ಅದೇ ಕ್ಷಣದಲ್ಲಿ ನನ್ನ ತಪ್ಪು ಮಾತಿನ ಅರಿವಾಯಿತು ನಡೆದ ಘಟನೆಗಳಿಗೆ ಕ್ಯಾಲೆಂಡರನ್ನು ದೂಷಿಸುತ್ತಿದ್ದೇನಲ್ಲ ಎಂದು. ನಡೆದ ತಪ್ಪುಗಳಿಗೆ ಯಾರನ್ನಾದರೂ ಹೊಣೆ ಮಾಡುವುದು ಮನುಷ್ಯನ ಸಹಜ ಗುಣ ಅನ್ನಿಸಿ ನಗು ಬಂತು.ಮತ್ತಲ್ಲೇ ತೂಗುಹಾಕಿ ಇನ್ನೆರಡು ದಿನ ಆರಾಮವಾಗಿ ಇರು ಕಾಲ ಎಲ್ಲರದ್ದು ಮುಗಿಯುತ್ತದೆ. ಹಾಗೆ ನಿನ್ನದೂ.. ಆದರೆ ಎಷ್ಟು ವಿಚಿತ್ರ ನೋಡು ನೀನು ಕಾಲ ಮುಗಿದ ಮೇಲೆ ಮತ್ತೆ ಇದೇ ರೂಪದಲ್ಲಿ ಬರುತ್ತೀಯ. ಯಾವ ವ್ಯತ್ಯಾಸವೂ ಇಲ್ಲದೇ. ಅದೇ ದಿನಾಂಕ, ಅದೇ ವಾರ, ಅದೇ ತಿಂಗಳು, ಅದೇ ಹಬ್ಬ ಹರಿದಿನಗಳನ್ನು ಹೊತ್ತು. ಕೇವಲ ಒಂದು ಸಂಖ್ಯೆಯನ್ನು ಬದಲಿಸಿಕೊಂಡು.ನಿನಗದು ಕರಾರುವಾಕ್ಕಾಗಿ ಗೊತ್ತಿದೆ. ಯಾರ ಕೈ ಚಳಕದೊಳಗೆ ಸಿಕ್ಕು ಹಣಿಸಿಕೊಂಡರೂ, ನಿನ್ನ ನಿಯಮಕ್ಕೇ ಬಂದು ನಿನಗೆ ರೂಪ ಕೊಡುತ್ತಾರೆ. ಮನುಷ್ಯನಂತೆ ಬೇರೆ ಬೇರೆ ದೇಹಗಳಿಗೆ ಹೊಕ್ಕು ಸಂಭ್ರಮಿಸುವ ನೋಯುವ ನಿಯಮವೂ ಇಲ್ಲ. ಆತ್ಮವು ಮಾತ್ಮತ್ತೆ ಅದದೇ ದೇಹದೊಳಗೆ ಹೊಕ್ಕು ನಗುವದೆಷ್ಟು ಸೋಜಿಗ ಅನ್ನಿಸುತ್ತದೆ. ಪ್ರತಿ ಮನೆಯಲ್ಲಿ ಅತ್ಯಂತ ಗೌರವದ ಸ್ಥಾನವೂ, ಮೂಲೆಗುಂಪು ಮಾಡುವ ನೋವು ಅನುಭವಿಸುವೆ.ಹೆಚ್ಚು ಕಡಿಮೆ ಮನುಷ್ಯನದು ಹಾಗೆ ಅಲ್ವಾ?ನಿನ್ನ ಹೊಸ ಹುಟ್ಟನ್ನು ತಂದು ಸಂಭ್ರಮಿಸುತ್ತಾರೆ, ಮತ್ತೆ ನಿನ್ನ ಎಸೆಯುತ್ತಾರೆ.ಬಹುಶಹ ಕಾಲಚಕ್ರ ಎನ್ನುವುದು ಇದೇ ಇರಬೇಕು.ಎಲ್ಲಿಂದಲೋ ಬಂದು, ಹೊಸತೊಂದು ಏನೂ ಸೇರಿಕೊಳ್ಳುವುದಿಲ್ಲ.ಇದೇ ಪರಿಧಿಯೊಳಗೆ ರೂಪಾಂತರವಾಗುತ್ತ ನಾವು ನೋಡುವ ರೀತಿಯಲ್ಲಿ ನಮಗೆ ಗೋಚರಿಸುತ್ತದೆ.ಹಾಗೆ ನಮ್ಮ ಸಂತೋಷ ಕೂಡ ಹೊರಗೆಲ್ಲೂ ಇರುವುದಿಲ್ಲ. ಅದು ನಮ್ಮೊಳಗೇ ಇರುತ್ತದೆ. ಅದನ್ನು ನಾವು ಗ್ರಹಿಸಬೇಕು ಮತ್ತದಕ್ಕೆ ಪುನಹಃ ಪುನಹಃ ಹೊಸ ರೂಪವನ್ನು ಕೊಡಬೇಕು ಅಷ್ಟೇ. ಕ್ಯಾಲೆಂಡರ್ ನಂತೆ.ಕಾಲದ ಜೊತೆಗೆ ಸಾಗುವಾಗ ನೀನೊಂದು ಅದ್ಭುತ ಸಂಗತಿ ಮತ್ತು ಸಂಗಾತಿಯಂತೂ ಹೌದು. ನಿನ್ನ ಬೀಳ್ಕೊಡುತ್ತಿಲ್ಲ ಮತ್ತೆ ಸ್ವಾಗತಿಸುತ್ತಿದ್ದೇನೆ ಎಂದೆ. ಸದ್ದು ಮಾಡುವುದು ನಿಲ್ಲಿಸಿ ನಕ್ಕಂತೆ ಭಾಸವಾಯಿತು ***********************************
ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್ Read Post »
ಭಾವಲಹರಿ… ಭಾವಲಹರಿ… ರಶ್ಮಿ.ಎಸ್. ಒಬ್ಬಂಟಿಯೆನಿಸಿದಾಗಲೆಲ್ಲ ಬಾಲ್ಕನಿಗೆ ಬಂದು ನಿಲ್ತೇನಿ. ಅದೆಷ್ಟು ದೂರದ ಗೊತ್ತಿಲ್ಲ.. ಅಷ್ಟೂ ದೂರದಿಂದ ನಕ್ಷತ್ರವೊಂದು ಮಿಣಮಿಣ ಅಂತ ಮಿಣುಕ್ತದ. ಕಣ್ಣುಪಿಳುಕಿಸಿ, ಕಣ್ಣಾಗ ನಗ್ತದ. ನನ್ನ ಮನಿ ಮುಂದಿನ ಬೇವಿನ ಮರದ ಎಲೆಗಳು ತಣ್ಣಗ ಗಾಳಿ ಸೂಸ್ತದ. ಅದರೊಳಗೊಂದು ಕಹಿಯ ಕಂಪೂ ಇರ್ತದ. ಇರುಳಿನ ತಂಪೂ ಇರ್ತದ. ಅಪಾರ್ಟ್ಮೆಂಟಿನಾಗ ಸಾಕಿದ್ದ ನಾಯಿ ಚೂರಿ ಬಂದು ಬೊಗಳ್ತದ. ‘ಚೂರಿ ಮಲಗೂದು ಬ್ಯಾಡೇನು.. ಅಂದ್ರ ಸಾಕು..’ ಪಾಪ ತನಗೆ ಅನ್ಕೊಂಡು ಸುಮ್ನಾಗಿ ಒಳಗ ಹೋಗ್ತದ. ಮತ್ತದೆ ರಾತ್ರಿ, ಮತ್ತದೆ ಒಂಟಿತನ. ಹಾಸಿಗೆಗೆ ಬೆನ್ನು ಆನಿಸಿ, ಅಂಗಾತ ಮಲಗಿದಾಗ, ಫ್ಯಾನಿನ ರೆಕ್ಕಿಗಳು ಮಾತಿಗಿಳೀತಾವ. ಈ ಫ್ಯಾನಿನ ರೆಕ್ಕಿಗಳ ಜೊತಿಗೆ ನನ್ನವು ಹಲವಾರು ಗುಟ್ಟುಗಳದಾವ. ರಾತ್ರಿಗಳಿಂದ ಯಾವ ಗುಟ್ಟುಗಳನ್ನೂ ಮುಚ್ಚಿಡಾಕ ಆಗೂದಿಲ್ಲ. ಗುಟ್ಟೇನು ಬಂತು.. ಏನೇನೂ ಮುಚ್ಚಿಡಾಕ ಆಗೂದಿಲ್ಲ. ಅಗ್ದಿ ನೀರವ ರಾತ್ರಿ ಇವು. ತೀರ ನಮ್ಮ ಹೃದಯದ ಲಯ, ನಮಗೇ ಕೇಳಿಸುವಷ್ಟು ನೀರವ ರಾತ್ರಿಗಳಿವು. ಇದ್ದಕ್ಕಿದ್ದಂತೆ ಫೋನಿನಲ್ಲಿ ಮಿನುಗು ದೀಪ. ಕತ್ತಲೆಗೆ ಹೊಂದಿಕೆಯಾಗಲಿ ಅಂತ ಬೆಳಕು ಕಡಿಮೆ ಮಾಡಿದಷ್ಟೂ ಮಾದಕ ಮಂದ ದೀಪ. ಯಾವುದೋ ಮೂಲೆಯಲ್ಲಿರುವವರಿಗೆ ಇದೀಗ ಎಚ್ಚರಿಕೆ. ಹೇಗಿದ್ದೀರಿ ಅಂತ ಕೇಳುವ ಕಾಳಜಿ. ಆದರೆ ಮನಸಿಗೆ ಅದ್ಯಾವುದೂ ಬೇಡ. ಯಾರೂ ಬೇಡ. ಮತ್ತದೇ ಏಕಾಂತದೊಳು, ನಾಭಿಯಾಳದಿಂದ ಒಮ್ಮೊಮ್ಮೆ ಅಳು, ನರನಾಡಿಯಲ್ಲಿ ವ್ಯಾಪಿಸುವಂತೆ ಆವರಿಸುತ್ತದೆ. ಕಂಗಳಿಗೂ ಹಟ. ಇನ್ನು ಕಂಬನಿ ಸುರಿಸಲಾರೆವು ಎಂಬಂತೆ. ಜೊತೆಗೆ ಕೆನ್ನೆಗಾನಲಾರೆವು ಎಂಬಂತೆ. ಮತ್ತೆ ಫೋನಿನ ಮಿಂಚು. ಅಲೆಮಾರಿಯೊಬ್ಬ, ಕಸ ಕೆದುಕುತ್ತ, ಹೂ ಗಿಡಗಳ ದಿಟ್ಟಿಸುತ್ತ, ಕಾಲಿನಿಂದ ಕಲ್ಲನ್ನೊಂದು ಒದೆಯುತ್ತ ಹೋದಂತೆ… ಎಫ್.ಬಿಯಲ್ಲಿ ಕಣ್ಣಾಡಿಸುತ್ತ, ಕೈ ಆಡಿಸುತ್ತ ಅಲೆಮಾರಿಯಾಗುವುದು. ಯಾವುದೇ ಉದ್ದೇಶವಿಲ್ಲದೆ, ಯಾವುದೇ ಅಜೆಂಡಾಗಳಿಲ್ಲದೆ, ಯಾರಿಗೂ ಕಿರಿಕಿರಿ ಮಾಡದೇ, ಯಾರನ್ನೂ ಮೆಚ್ಚಿಸಲೆಂದೋ, ದೂರಲೆಂದೋ… ಏನೇನೂ ಬರೆಯದೆ, ಖುಷಿಯೆನಿಸಿದ ಹಾಡು, ಸಂಕಟವನ್ನೇ ಪದಗಳಲ್ಲಿ ಹಿಡಿದಿಡುವ ಶಾಯರಿಗಳನ್ನು ಹಂಚುತ್ತ ಹೋಗುವುದು. ಅದು ಯಾರಾದರೂ ಓದಲಿ ಅಂತಲ್ಲ. ನಮ್ಮ ಪುಟದಲ್ಲಿ ಉಳಿಯಲಿ ಅಂತ. ಅಂಥವನ್ನು ಓದಿ, ಒಂದಷ್ಟು ಮೆಸೆಂಜರ್ನಲ್ಲಿ ವಿಚಾರಿಸಿಕೊಳ್ಳುವುದು. ಆಪ್ತರೆನಿಸಿದರೆ ಉತ್ತರಿಸುವದು, ಇಲ್ಲದಿರೆ ನೋಡಿ, ಮುಗುಳೊಂದನ್ನು ಚೆಲ್ಲಿ, ಮುಂದಕ್ಕೆ ಹೋಗುವುದು. ಇದಿಷ್ಟೂ ಆಗುವಾಗ, ಬದುಕಿಡೀ ಕಪ್ಪುಬಿಳುಪಿನ ಚಿತ್ರದಂತೆ ಕಾಣತೊಡಗುತ್ತದೆ. ಕಾಡತೊಡಗುತ್ತದೆ. ಕತ್ತಲೆಯೊಳಗೆ ಬಣ್ಣಗಳಿಲ್ಲ. ಬಣ್ಣಗಳಿರುವುದಿಲ್ಲ. ಒಂದೋ ಕಡುಕಪ್ಪು. ಇಲ್ಲವೇ ಶ್ವೇತಶುಭ್ರ ಬಿಳುಪು. ಈ ಎರಡರ ನಡುವಿನ ಬೂದು ಬಣ್ಣಕ್ಕೆ ಯಾವ ಅರ್ಥವೂ ಇಲ್ಲ. ಕಡುಕಪ್ಪು ರಾತ್ರಿ, ಹೀಗೆ ಬೆಳಗಿನ ಸೆರಗಿನಂಚಿಗೆ ಸರಿಯುವಾಗ ನಿದ್ದೆ ಸುಳಿಯುತ್ತದೆ. ಕಣ್ರೆಪ್ಪೆ ಕೆನ್ನೆಗಾನುತ್ತವೆ… ಈ ರಾತ್ರಿಗಳಲ್ಲಿ ಅದೆಷ್ಟು ಗುಟ್ಟುಗಳಡಗಿವೆಯೋ… ಅದೆಷ್ಟು ಚುಕ್ಕೆಯಂಥ ಮಿಣಮಿಣ ನಗು ಮಿಂಚಿದೆಯೋ… ಮತ್ತ ಮರುದಿನ ಎಚ್ಚರ ಆದಾಗ, ಸಣ್ಣದೊಂದು ನಗು.. ಇನ್ನೊಂದು ರಾತ್ರಿ ಸಿಕ್ತು.. ಮೋಹಿಸಲು… ಏಕಾಂತವನ್ನು ಅನುಭವಿಸಲು, ಯಾವ ಮುಖವಾಡಗಳಿಲ್ಲದೆ ನನ್ನತನವನ್ನು ಇಡಿಯಾಗಿ ಅನುಭವಿಸಲು. ಈ ಚಳಿಗಾಲದ ನೀರವ ರಾತ್ರಿಯ ಮೌನದೊಳಗಿನ ಮಾತುಗಳಿಗೆ, ಮಾತುಗಳ ನಡುವಿನ ಮೌನಕ್ಕೆ ಮರುಳಾಗುತ್ತಲೇ ಇರ್ತೀನಿ. ರಾತ್ರಿಗಳನ್ನು ಮೋಹಿಸುವುದು ಈ ಕಾರಣಕ್ಕೆ. ಮೋಹಕ ರಾತ್ರಿಗಳನ್ನು ಪ್ರೀತಿಸುವುದೂ ಇದೇ ಕಾರಣಕ್ಕೆ. **********************************
ಚಂದಿರನ ಬೆಳದಿಂಗಳಲ್ಲಿ Read Post »
ಒಲವಿನೋಲೆ.. ಜಯಶ್ರೀ.ಭ. ಭಂಡಾರಿ ಓ ಒಲವೇ ನೀ ಎಲ್ಲಿರುವೆ…. ನೀ ನನ್ನ ಹುಡುಕಿಕೊಂಡು ಬಂದು ಆಗಲೇ ೨ ವರ್ಷ ಕಳೆಯಿತು. ನೀ ಬಂದಾಗ ನನಗೆ ನಿನ್ನ ಮೇಲೆ ಅದ್ಯಾವ ಭಾವನೆ ಗಳೇ ಇರಲಿಲ್ಲ. ಈಗ ನಾನು ಈ ಭೂಮಂಡಲಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ. ಪ್ರತಿಕ್ಷಣ ನಿನ್ನ ಬಿಟ್ಟರೆ ಹರಿದಾಡುವ ಗಾಳಿಗೂ ಜಾಗವಿಲ್ಲ. ನನ್ನ ಬಾಳಿನ ಕಗ್ಗತ್ತಲು ಬೆಳಗಲು ನೀನೇ ಬೇಕು. ಅತಿಯಾದ ಪ್ರೀತಿಯಲ್ಲಿ ನನ್ನ ನಾ ಮರೆತಿಹೆ.ನೀನಿಲ್ಲದ ಹೊತ್ತು ನೆನೆಯಲು ಸಾಧ್ಯವಿಲ್ಲ. ನಿನ್ನಲ್ಲಿ ಒಂದು ಕೆಟ್ಟ ಹಾಬಿ ಇದೆ.ಡ್ಯೂಟಿಯಲಿ ನಿರತನಾದರೆ ನನ್ನ ಮರೆತು ತನ್ಮಯನಾಗಿ ಬಿಡತಿ. ಅನೇಕ ಸಲ ಫೋನಾಯಿಸಿದರೂ ರಿಸಿವ್ ಮಾಡಲ್ಲ. ನಾನು ಸಿಟ್ಟಿನಿಂದ ಮುಖ ಉಬ್ಬಿಸಿ ಕೂತರೆ ಸಂಜೆ ನೇರ ಬಂದವನೇ ಕೊರಳಿಗೆ ಬೆರಳಹಾರ ಹಾಕಿ ಕೆನ್ನೆ ಚುಂಬಿಸಿ ನಿನ್ನ ಬೆವರು ಘಮಲಿನಲ್ಲಿ ಮೀಯಿಸಿ ಬುಟ್ಟಿಗೆ ಹಾಕಿಕೊಳ್ಳುವ ಕಲೆ ಕರಗತವಾಗಿದೆ. ಹೀಗಾಗಿ ನನ್ನ ಸಿಟ್ಟು ಗಾಳಿಗಿಟ್ಪ ದೀಪದಂತೆ ಆಗುತ್ತದೆ. ಅಪ್ಪಾಜಿ ಪ್ಲೀಜ್ ಕ್ಷಮಿಸು ಅಂತ ನನ್ನ ಮುದ್ದು ಮಾಡುವಾಗ ನನಗೆ ಸಿಟ್ಟಿನಲ್ಲಿಯೇ ಒಲವು ಹೆಚ್ಚು ಲವಲವಿಕೆ ನೀಡುತ್ತದೆ. ಚಿನ್ನದ ಮಲ್ಲಿಗೆ ಹೂವೆ ಬಿಡು ನೀ ಬಿಂಕದ ಚೆಲುವೆ ಎಂದು ರಾಗವಾಗಿ ಹಾಡುವ ನಿನ್ನ ದನಿಗೆ ಸೋತು ಶರಣಾಗಿ ಬಿಡುವೆ. ನನಗೆ ಕೊಂಚ ಆರಾಮ ತಪ್ಪಿದರೂ ನಿನ್ನ ಜೀವ ಬಾಡಿ ಬಸವಳಿಯುತ್ತೆ. ಅತಿಯಾದ ಕಾಳಜಿ ಮಾಡಿ ನನ್ನ ಆರಾಮ ಮಾಡುವೆ. ಕಣ್ಣ ರೆಪ್ಪೆಯಂತೆ ಕಾಯುವ ನಿನ್ನ ಹೃದಯ ಅನುರಾಗಕೆ ಬಣ್ಣಿಸಲು ಪದಗಳೇ ಇಲ್ಲ ಗೆಳೆಯ. ಟೆಲಿಫೋನ್ ಗೆಳತಿ ನೀನಿಲ್ಲದೆ ಇರಲಾರೆ ಎಂದು ಛೇಡಿಸಿ ಕಾಡುವ ನೀ ಹಿಂಗ ಅಚಾನಕ್ ದೂರಾಗಿ ಹೋಗತಿ ಅಂದುಕೊಂಡಿರಲಿಲ್ಲ ಗೆಳೆಯಾ.. . ಯಾಕೆ ದೂರಾದೆ ಏನಾಯ್ತು ನಿನ್ನ ಒಲವು. ಬೊಗಸೆ ಕಂಗಳ ನಿನ್ನ ಗೆಳತಿಯನ್ನು ಮರೆಯಲು ನಾ ಮಾಡಿದ ತಪ್ಪಾದರೂ ಏನು? ನೀನಿಲ್ಲದೆ ಅರೆ ಜೀವವಾಗಿರುವೆ. ಚಂದ್ರನ ತಂಪು ಬಿಸಿಲಾಗಿದೆ.ಸುಳಿಯುವ ಗಾಳಿಯಲೂ ನಿನ್ನನೇ ಹುಡುಕುವಂತಾಗಿದೆ. ನೀನಿಲ್ಲದೆ ಈ ಜನ್ಮದಲ್ಲಿ ನನಗೆ ಬದುಕುವ ಆಸೆಯಿಲ್ಲ. ನಿನ್ನ ಸಾನ್ನಿಧ್ಯ, ಆಲಿಂಗನ, ಬಿಸಿಯುಸಿರು ಆ ಮಿಂಚು ಕಂಗಳಲ್ಲಿ ವ್ಯಕ್ತವಾಗುವ ಮಾತು ಗಳಿಗೆ ಮೀರಿದ ಭಾವನೆಗಳನ್ನು ಹೆಂಗೆ ಮರೆಯಲಿ ದೇವರಂಥ ಗೆಳೆಯಾ… ವರ್ಷ ದ ಮೂರೂ ಕಾಲಗಳಲ್ಲಿಯೂ ಧೋ ….. ಎಂದು ಒಲವಿನ ಮಳೆ ಸುರಿಸುತ್ತಿದ್ದರೆ ಈ ನಿನ್ನ ಗೆಳತಿ ಪುನೀತಳಾಗಿ ಅರಳುತ್ತಿದ್ದಳು. ಪ್ರೀತಿಯ ಅಮೃತಧಾರೆ ಉಣಿಸಿ ದೂರ ಹೋದೆ. ನೀ ಬರುವ ದಾರಿಯಲಿ ಕಂಗಳ ಹಾಸಿ ಕಾಯುತಿರುವ….. ನಿನ್ನ ಕಪ್ಪು ಕಂಗಳ ಚೆಲುವೆ… ****************************************
ರಶ್ಮಿ ಬರೆಯುತ್ತಾರೆ
ಈಗ ಅಡಗಿ ಮಾಡೂದೆ ಒಂದು ಸಮಯ ನಿರ್ವಹಣೆಯ ತಂತ್ರ ಆಗಿ ಬದಲಾಗೇದ. ಅಡಗಿ ಮಾಡೋರಿಗೂ ವ್ಯವಧಾನ ಇಲ್ಲ. ಊಟ ಅಸ್ವಾದಿಸೋರಿಗೂ ಇಲ್ಲ. ಅಡಗಿ ಮಾಡೂದು ಬರೂದಿಲ್ಲ ಅಂತ ಹೇಳೂದೆ ನಾಜೂಕಿನ ಮಾತಾಗೇದ
ನಾದಬೇಕು …ನಾದ ಬೇಕು !! Read Post »
” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು” ರಶ್ಮಿ ಎಸ್. ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ ಡಿ. 6,7,8 ಬಾಬರಿ ಮಸೀದಿ ಪ್ರಕರಣ ಆದಾಗ ಇಡೀ ದೇಶ ಕೋಮು ದಳ್ಳುರಿಯೊಳಗ ಧಗಧಗಿಸುತ್ತಿತ್ತು… ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ … ಮುಗಲ ಮಾರಿಯೊಳಗ ದೇವರ ನಗಿ ನೋಡ್ಕೊಂತ… ನನ್ನ ತಾಯಾ, (ದೊಡ್ಡಪ್ಪ) ಅಂಗಳದೊಳಗ ಅರಾಮ ಕುರ್ಚಿ ಹಾಕ್ಕೊಂಡು ಆಕಾಶ ನೋಡ್ಕೊಂತ ಕುಂತಾರ ಅಂದ್ರ ಏನೋ ಚಿಂತಿ ಕಾಡ್ತದ ಅಂತನೇ ಅರ್ಥ. ಅವಾಗ ನಾವು ಯಾರೂ ಅವರೊಟ್ಟಿಗೆ ಮಾತಾಡ್ತಿರಲಿಲ್ಲ. ಬೇವಿನ ಮರದ ನೆರಳಾಗ ಕುಂತು ನೀಲಿ ಆಕಾಶದೊಳಗ ಹಾದು ಹೋಗುವ ಬಿಳೀ ಮುಗಿಲು ನೋಡ್ಕೊಂತ ಅವರ ಕೈ ಲೆಕ್ಕಾ ಹಾಕ್ತಿದ್ವು. ಅವರ ಹೆಂಡತಿ ಜಿಯಾ, ಮೊಮ್ಮಾ ಅಂತ ಕರೀತಿದ್ವಿ. ಕುರ್ಚಿಯಿಂದ ‘ಜಿಯಾ… ಚಾಯ್.. ಪಿಲಾತೆ’ ಅಂತ ಕೇಳಿದ್ರ ಸಾಕು, (ಉತ್ತರ ಸಿಕ್ತು ಅಂತನೇ ಅರ್ಥ.) ಛಾ ತರೂತನಾನೂ ಅವರ ಗುಡಾಣದಂಥ ಹೊಟ್ಟಿ ಮ್ಯಾಲೆ ನನ್ನ ಕೂಸಿನ್ಹಂಗ ಮಲಗಿಸಿಕೊಂಡು ಗುಳುಗುಳು ಮಾಡೋರು. ನನ್ನ ನಗಿ ಅಲಿಅಲಿಯಾಗಿ ಹರಡ್ತಿತ್ತು. ಏಳುವರಿ ಅಡಿ ಎತ್ತರದ ಅಜಾನುಬಾಹು ನನ್ನ ತಾಯಾ. ಅವರ ಕರಡಿ ಅಪ್ಪುಗೆಯೊಳಗ ನಾನು ಮಾತ್ರ ಯಾವತ್ತಿಗೂ ಕೂಸೇ. ಯಾರಿಗೂ ಇರಲಾರದ ಸಲಗಿ ನನಗ ಇತ್ತು. ‘ಆಸ್ಮಾನ್ಸೆ ಕ್ಯಾ ಆಪ್ಕೊ ಅಲ್ಲಾತಾಲಾ ನೆ ಜವಾಬ್ ದಿಯಾ?’ (ಆಕಾಶದಿಂದ ಆ ದೇವರು ನಿಮಗ ಉತ್ತರ ಕೊಟ್ರೇನು?) ಅಂತ ಕೇಳಿದ್ರ ಅದಕ್ಕೂ ಗುಳುಗುಳು ಮಾಡೂದೆ ಉತ್ತರ ಆಗಿರ್ತಿತ್ತು. ನಾವೆಷ್ಟೇ ದೊಡ್ಡವರು ಆಗಿದ್ರೂ ಈ ಕರಡಿ ಅಪ್ಪುಗೆ, ಈ ಗುಳುಗುಳು ಮತ್ತು ಅವರ ಮಡಿಲೊಳಗ ಮಗುವಾಗಿ ಮಲಗುವ ವಾತ್ಸಲ್ಯದಿಂದ ಮಾತ್ರ ಯಾವತ್ತೂ ವಂಚಿತರಾಗಿರಲಿಲ್ಲ. ಆದ್ರ ನಾವು ಬೆಳದ್ಹಂಗ ನಮ್ಮ ಪ್ರಶ್ನೆಗಳು ಭಿನ್ನ ಆಗಿರ್ತಿದ್ದವು. ಬ್ಯಾಸಗಿ ರಾತ್ರಿ ಅದು. ಸ್ವಚ್ಛ ಆಕಾಶ. ಚುಕ್ಕಿ ಅಲ್ಲಲ್ಲೇ ಮಿಣಮಿಣ ಅಂತಿದ್ವು. ದೊಡ್ಡ ಅಂಗಳ. ಬೇವಿನ ಮರ, ತೆಂಗಿನ ಮರ, ಬದಾಮಿ ಮರದ ನೆರಳನಾಗ ನಾವೆಲ್ಲ ಕುಂತು ಆಕಾಶ ನೋಡ್ತಿದ್ವಿ. ಹೋಳಿ ಹುಣ್ಣಿವಿ ಸಮೀಪ ಇತ್ತು. ಒಂದೆರಡೇ ಮೋಡದ ತುಂಡುಗಳು ದುಡುದುಡು ಓಡಿ ಹೊಂಟಿದ್ವು. ಅದೇ ಆಗ ಕಾಲು ಬಂದ ಉಡಾಳ ಕೂಸಿನ್ಹಂಗ. ಅವಾಗ ತಾಯಾನ ಮಡಿಲೊಳಗ ಕುಂತು ದ್ರಾಕ್ಷಿ ತಿನ್ಕೊಂತ.. ‘ಖರೇನೆ ನಿಮಗ ದೇವ್ರು ಉತ್ರಾ ಕೊಡ್ತಾನ? ಖರೇನೆ ದೇವರ ಮನಿ ಆಕಾಶದೊಳಗ ಐತೇನು? ನನಗೂ ಒಮ್ಮೆ ತೋರಸ್ರಿ…’ ಎಲ್ಲಾ ಪ್ರಶ್ನೆಗೂ ಉತ್ತರ ಕೊಡೂಕಿಂತ ಮೊದಲು ಉದ್ದಾನುದ್ದ ದ್ರಾಕ್ಷಿ ಆರಸಿ ಬಾಯಿಗೆ ಹಾಕ್ತಿದ್ರು. ಆಮೇಲೆ ತಾಯಾ ಮಾತಾಡಾಕ ಸುರು ಮಾಡಿದ್ರು. ‘ದೇವರು ಆಕಾಶದೊಳಗ ಇರೂದಿಲ್ಲ. ದೇವರು ನಮ್ಮೊಳಗ ಇರ್ತಾನ. ನಮ್ಮ ಮನಸಿನಾಗ ಇರ್ತಾನ. ಮನಸನ್ನು ಆಕಾಶದಷ್ಟು ವಿಷಾಲ ಮಾಡಿಕೊಂಡು ಅವನಿಗೆ ನಮ್ಮೊಳಗೇ ಹುಡುಕಬೇಕು. ಅವಾಗ ಮನಸ ಮ್ಯಾಲೆ ಕವಿದಿರುವ ಮೋಡಗಳೆಲ್ಲ ಚದುರಿ ಹೋಗ್ತಾವ. ನಮ್ಮ ಚಿಂತಿನೂ ಹಂಗೆ. ನಮ್ಮನ್ನೇ ನಾವು ನೋಡ್ಕೋಬೇಕು. ನಮ್ಮನ್ನ ಆವರಿಸಿರುವ ಮೋಡಗಳು ಚದರುವ ಹಂಗ ಮಾಡಬೇಕು. ಆಗ ಪರಿಹಾರದ ಚುಕ್ಕಿಯ ಹೊಳಹು ನಮಗೇ ಹೊಳೀತಾವ’ ನಮ್ಮೊಳಗಿನ ದೇವರನ್ನು ಹುಡುಕುವ ಪರಿ ಮಾತ್ರ ನಾವೇ ಕಂಡುಕೋಬೇಕು. ನಮ್ಮ ದೇವರನ್ನು ನಾವೇ ಕಾಣಬೇಕು ಅಂದ್ರು. ‘ಅಂದ್ರ, ನಿಮ್ಮ ದೇವರು ಬ್ಯಾರೆ, ನನ್ನ ದೇವರು ಬ್ಯಾರೆ ಏನು’ ಅಂದೆ. ‘ದೇವರು ಅಂದ್ರ ಅದೊಂದು ಸತ್ಯ. ನಿನ್ನ ಸತ್ಯವೇ ಬೇರೆ, ನನ್ನ ಸತ್ಯವೇ ಬೇರೆ. ಒಂದು ಪರಿಪೂರ್ಣ ಸತ್ಯವಾಗಿರೂದು ಸಾಧ್ಯವೇ ಇಲ್ಲ. ಒಂದು ಸತ್ಯಕ್ಕೆ ನಾಲ್ಕಲ್ಲ ಹದಿನಾರು ಆಯಾಮ ಇರ್ತಾವ. ಒಂದು ಇನ್ನೊಂದಕ್ಕ ಸತ್ಯ ಅಲ್ಲ ಅಂತ ಅನ್ನಸಬಹುದು’. ‘ಹಂಗಾದ್ರ ಎಲ್ಲಾನೂ ಸತ್ಯ ಅಲ್ಲ, ಎಲ್ಲಾನೂ ಸುಳ್ಳಲ್ಲ ಅಂತ ಅಂತೀರೇನು? ಯಾರಿಗೂ ಕೆಡುಕಾಗದೇ ಇರೂದು ಸತ್ಯ. ನಮ್ಮೊಳಗಿನ ಸತ್ಯವನ್ನು ನಾವೇ ಹುಡುಕಬೇಕು.’ ಹಿಂಗೇ ಸೂಫಿ ಸಂತನಹಂಗ ಮಾತಾಡತಿದ್ದ ತಾಯಾಗ ಸಿಟ್ಟು ಬಂದ್ರ ಮಾತ್ರ ಅವರೇ ಹೇಳೂಹಂಗ ಹೈವಾನ್ ಆಗ್ತಿದ್ರು. ಸಿಕ್ಕಿದ್ದು ತೊಗೊಂಡು ಆಳಮಕ್ಕಳಿಗೆ ಹೊಡೀತಿದ್ರು. ಅವರ ಆ ಅವತಾರ ಮಾತ್ರ ದಿಗಿಲು ಹುಟ್ಟಸ್ತಿತ್ತು. ಯಾಕ ಅವಾಗ ಅವರೊಳಗಿನ ದೇವರು ಮಲಗಿರ್ತಿದ್ದ? ಅಥವಾ ಅವರೇ ಹೇಳುಹಂಗ ಆ ದೇವರೇ ಇಲ್ಲವಾಗ್ತಿದ್ದನಾ? ಗೊತ್ತಿಲ್ಲ. ಈಗ ಹೇಳಾಕ ಅವರಿಲ್ಲ. ಆದ್ರ ಅವರು ತೋರಿದ ಆ ದಾರಿ ಈಗಲೂ ಭಾಳಷ್ಟು ಸಲೆ ಖರೆ ಅನ್ನಸ್ತದ. ನಮ್ಮ ಜೀವನದಾಗ ಒಂದು ಹಂತ ಎಂಥಾದ್ದು ಬರ್ತದ ಅಂದ್ರ, ‘ಎಲ್ಲಾರಿಗೆ ನಾವು ಬ್ಯಾಡಾಗೇವಿ. ನಾವಿರಲಿಲ್ಲಂದ್ರೂ ಎಲ್ಲಾನೂ ನಡದು ಹೋಗ್ತದ. ನಾವು ಎಲ್ಲಿಯೂ ಅನಿವಾರ್ಯ ಅಲ್ಲ. ನಾವಿರಲಿಲ್ಲ ಅಂದ್ರ ನಮಗಿರುವ ಕಷ್ಟಗಳು ನಮಗಷ್ಟೇ ಇರೂದಿಲ್ಲ. ಆದ್ರ ಉಳದೋರು ಆರಾಮ ಇರ್ತಾರ’ ಅನ್ನೂದೊಂದು ಭಾವ ಗಟ್ಟಿಯಾಗಾಕ ಸುರುಮಾಡ್ತದ. ಇದೊಂಥರ ನಮ್ಮ ಜೀವನಾಸಕ್ತಿ, ಆಸ್ಥೆಯನ್ನೇ ಕೊಂದು ಬಿಡ್ತದ. ಏನು ಮಾಡಿದ್ರೂ ಅಷ್ಟೆ, ಎಷ್ಟು ಮಾಡಿದ್ರೂ ಅಷ್ಟೆ… ಯಾರಿಗರೆ ಯಾಕ ಮಾಡಬೇಕು?’ ಇಂಥವೇ ಅಸಮಾಧಾನಗಳು ಗೂಡು ಕಟ್ತಾವ. ಈ ಗೂಡಿನೊಳಗ ಸಾವನ್ನು ಪ್ರೀತಿಸುವ ಸೈತಾನ ವಾಸಸ್ತಾನ. ಜೀವದ ಹಕ್ಕಿಯನ್ನ ತನ್ನ ಗೂಡಿನೊಳಗ ಮೆತ್ತನೆಯ ಹಾಸು ಮಾಡಿಕೊಂಡು ಮಲಗಿ ಬಿಡ್ತಾನ. ಅದು ಕೊಸರಾಡ್ತದ. ಒದ್ದಾಡ್ತದ. ಉಸಿರುಗಟ್ಕೊಂಡು, ಬದುಕಾಕ ಒಂದು ಸಣ್ಣ ಎಳಿ ಸಿಕ್ರೂ ಸಾಕು ಅಂತ ಪಿಳಿಪಿಳಿ ಕಣ್ಣು ಬಿಟ್ಕೊಂಡು ಕುಂತಿರ್ತದ. ನಿದ್ದಿ ಅನ್ನೂದು ಅದಕ್ಕ ಬಂಗಾರದ್ಹಂಗ ಭಾಳ ತುಟ್ಟಿ. ಹಿಂಗಾದಾಗಲೆಲ್ಲ ಎಲ್ಲಾರು ಮಲಕ್ಕೊಂಡ ಮ್ಯಾಲೆ ಬಾಲ್ಕನಿಗೆ ಬಂದು ನಿಂದರ್ತೀನಿ. ಸ್ವಚ್ಛ ಮುಗಲನಾಗ ಮೋಡಗಳೂ ಓಡತಿರ್ತಾವ. ಕೆಲವೊಮ್ಮೆ ಮಂದ. ಕೆಲವೊಮ್ಮೆ ಅಗ್ದಿ ಚುರುಕಾಗಿ. ನಮ್ಮ ಪರಿಸ್ಥಿತಿಗೆ ಕಾರಣ ಹುಡುಕೂದೇ ಆಕಾಶ ನೋಡ್ಕೋಂತ ಮನಸಿನೊಳಗ ಹಣಕಿ ಹಾಕ್ತೀವಿ. ಯಾರಿಗೂ ನಾವು ಅನಿವಾರ್ಯವಿಲ್ಲ ಅಂತ ಅಂದ್ಕೊಂಡ ಕ್ಷಣದ್ಹಂಗೇ ಒಂದರೆ ನಿಮಿಷ ಮರುದಿನದ ಬೆಳಗು ನಾನಿಲ್ಲದೆ, ನನ್ನ ಗಂಡ, ಮಕ್ಕಳಿಗೆ ಹೆಂಗಿರಬಹುದು, ನಾನಿಲ್ಲದ ಸತ್ಯವನ್ನು ನನ್ನ ಹೆತ್ತವರು ಹೆಂಗ ಒಪ್ಕೊಬಹುದು ಅನ್ನೂ ಪ್ರಶ್ನೆಗಳು ಈ ಮೋಡದೊಂದಿಗೆ ಹಾದು ಹೋಗ್ತಾವ. ಮತ್ತ ಹಂಗೇ ಆಕಾಶ ಸ್ವಚ್ಛ ಆಗ್ತದ. ಮನಸೂ. ಕೆಲವೊಮ್ಮೆ ಆಕಾಶದೊಳಗ ಎಲ್ಲೊ ಚುಕ್ಕಿಯಾಗಿ ನನ್ನನ್ನ ನೋಡ್ತಿರುವ ತಾಯಾ, ಮೊಮ್ಮಾ ನೆನಪಾಗ್ತಾರ. ಎಂಥ ಸಂದಿಗ್ಧ ಪರಿಸ್ಥಿತಿಯೊಳಗೂ ನಮ್ಮ ಇರುವಿಕೆಗೊಂದು ಅರ್ಥ ಅದ. ಆ ಪರಿಸ್ಥಿತಿಯೂ ನಮ್ಮ ಜೀವಕ್ಕ, ಜೀವನಕ್ಕ ಒಂದು ಅರ್ಥ ನೀಡ್ತದ. ಈ ಅರ್ಥದ ಹೊಳಹು ಹೊಳದಾಗ ಆಕಾಶದಾಗ ಬೂದು ಬಣ್ಣ ಹೋಗಿ, ತಿಳಿ ಗುಲಾಬಿ ಬಣ್ಣ ಮೂಡ್ತಿರ್ತದ. ಜೊತಿಗೆ ಸೂರ್ಯನೂ ಹುಟ್ಟತಿರ್ತಾನ. ಅದರೊಟ್ಟಿಗೆ ನಾವೂ ಮತ್ತ ಹುಟ್ಟಿ ಬರಬೇಕು. ಆ ಹೊಸ ಹೊಳಹಿನೊಂದಿಗೆ. ನಮ್ಮ ಸತ್ಯದ ದೇವರು ನಮಗ ಕಾಣುವ ಹೊತ್ತದು. ಮುಗಿಲಮಾರಿಯೊಳಗ ದೇವರು ನಕ್ಕು ಮುಂದ ಸಾಗೂ ಹೊತ್ತದು. ನೋಡುವ ಕಣ್ಣುಬೇಕು. ಹುಡುಕುವ ಮನಸು ಬೇಕು. ತಾಯಾನ್ಹಂಗ..! …*******************************************************
” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು” Read Post »
You cannot copy content of this page