ನಾದಬೇಕು …ನಾದ ಬೇಕು !!
ರಶ್ಮಿ ಬರೆಯುತ್ತಾರೆ
ಈಗ ಅಡಗಿ ಮಾಡೂದೆ ಒಂದು ಸಮಯ ನಿರ್ವಹಣೆಯ ತಂತ್ರ ಆಗಿ ಬದಲಾಗೇದ. ಅಡಗಿ ಮಾಡೋರಿಗೂ ವ್ಯವಧಾನ ಇಲ್ಲ. ಊಟ ಅಸ್ವಾದಿಸೋರಿಗೂ ಇಲ್ಲ. ಅಡಗಿ ಮಾಡೂದು ಬರೂದಿಲ್ಲ ಅಂತ ಹೇಳೂದೆ ನಾಜೂಕಿನ ಮಾತಾಗೇದ
ನಾದಬೇಕು …ನಾದ ಬೇಕು !! Read Post »
ರಶ್ಮಿ ಬರೆಯುತ್ತಾರೆ
ಈಗ ಅಡಗಿ ಮಾಡೂದೆ ಒಂದು ಸಮಯ ನಿರ್ವಹಣೆಯ ತಂತ್ರ ಆಗಿ ಬದಲಾಗೇದ. ಅಡಗಿ ಮಾಡೋರಿಗೂ ವ್ಯವಧಾನ ಇಲ್ಲ. ಊಟ ಅಸ್ವಾದಿಸೋರಿಗೂ ಇಲ್ಲ. ಅಡಗಿ ಮಾಡೂದು ಬರೂದಿಲ್ಲ ಅಂತ ಹೇಳೂದೆ ನಾಜೂಕಿನ ಮಾತಾಗೇದ
ನಾದಬೇಕು …ನಾದ ಬೇಕು !! Read Post »
ಲಲಿತ ಪ್ರಬಂಧ ಪರಿವರ್ತನೆಗೆ ದಾರಿ ಯಾವುದಾದರೇನು? ನಾಗರೇಖಾ ಗಾಂವಕರ್ ಹೊಸ ಸುತ್ತೋಲೆಯಂತೆ ಪದವಿ-ಪೂರ್ವ ಹಂತಕ್ಕೂ ಪ್ರಾರ್ಥನೆಯನ್ನು ಕಡ್ಡಾಯಗೊಳಿಸಿ ಇಲಾಖೆ ಆದೇಶ ಹೊರಡಿಸಿದ್ದು ಪಡ್ಡೆ ಹುಡುಗರಿಗೆ ಕೊಂಚವೂ ಇಷ್ಟವಿಲ್ಲ. ಆಗಾಗ ಆ ಬಗ್ಗೆ ತಕರಾರು ಮಾಡುವ ಗುಂಪು ಇದ್ದೇ ಇತ್ತು. ಆದರೂ ಪ್ರಾಚಾರ್ಯರು ಅದಕ್ಕೆಲ್ಲ ಅವಕಾಶ ಕೊಡದೆ ಕಡ್ಡಾಯ ಎಂದು ನೋಟೀಸು ತೆಗೆದು ಒತ್ತಡ ಹೇರಿದ್ದರು. ಹಾಗಾಗಿ ವಿದ್ಯಾರ್ಥಿಗಳು ಪ್ರಾರ್ಥನೆಗೆ ಹಾಜರಾಗುವುದು ಅನಿವಾರ್ಯವಾಗಿತ್ತು. ವಾಣಿಜ್ಯ ವಿಭಾಗದ ಆ ತರಗತಿಯಲ್ಲಿ ಇರುವುದು ಬರಿಯ ಇಪ್ಪತೆಂಟು ವಿದ್ಯಾರ್ಥಿಗಳು ಮಾತ್ರ. ಉಳಿದೆಲ್ಲ ಮಕ್ಕಳು ಸಮಯಕ್ಕೆ ಸರಿಯಾಗಿ ಬಂದರೆ ಆ ಹುಡುಗ ಮಾತ್ರ ದಿನವೂ ತಡವಾಗಿಯೇ ಕಾಲೇಜಿಗೆ ಬರುತ್ತಿದ್ದ. ಕೈಯಲ್ಲಿ ಒಂದು ನೋಟ್ ಪುಸ್ತಕ ಬಿಟ್ಟರೆ ಬೇರೇನೂ ಇರುತ್ತಿರಲಿಲ್ಲ. ಹಾಕಿಕೊಂಡ ಯೂನಿಫಾರ್ಮ ಅಲ್ಲಲ್ಲಿ ಕೊಳೆ ಮೆತ್ತಿಕೊಂಡಂತೆ ಇದ್ದರೆ ಕೂದಲನ್ನು ವಿಕಾರ ಶೈಲಿಯಲ್ಲಿ ಕ್ರಾಪು ಹೊಡೆಸಿಕೊಂಡಿದ್ದ.ಆತ ಬರುವ ಗತ್ತು ಮಾತ್ರ ಥೇಟ್ ಹೀರೋ, ಬಹುಶಃ ಕನ್ನಡದ ದರ್ಶನ್ ಇಲ್ಲವೇ ಯಶ್ ಇವರ ನಡಿಗೆಯಿಂದ ಪ್ರಭಾವಿತನಾಗಿದ್ದಂತೆ ಇತ್ತು. ಪ್ರತಿದಿನ ಪ್ರಾರ್ಥನೆ ತಪ್ಪಿಸುವ, ತಡವಾಗಿ ಬರುವ ವಿದ್ಯಾರ್ಥಿಗಳನ್ನು ಹಿಡಿಯಲು ಕ್ಲಾಸರೂಮಿನ ಹೊರಗೆ ಉಪನ್ಯಾಸಕರ ದಂಡು ಕಾಯುತ್ತ ಕುಳಿತಿರುತ್ತಿದ್ದರು. ಆದರೂ ಈ ಹುಡುಗ ಮಾತ್ರ ನನಗಾರೂ ಸಮನಿಲ್ಲ, ಎಂಬ ಉಡಾಫೆಯಲ್ಲಿ ತಡವಾಗಿಯೇ ಬರುತ್ತಿದ್ದ.. ಕನ್ನಡ ಉಪನ್ಯಾಸಕರಿಗೂ ಅವನಿಗೂ ಯಾವಾಗಲೂ ಎಣ್ಣೆ ಸೀಗೆಕಾಯಿ ಸಂಬಂಧ.ಎಂದಿನಂತೆ ಈತ ಕಂಡದ್ದೆ ತಡ, ಅವರು ಮಂಗಳೂರಿನ ಭಾಷಾ ಶೈಲಿಯಲಿ “ ಏ ಹುಡುಗಾ, ಕಾಲೇಜು ಪ್ರಾರ್ಥನೆ ಎಷ್ಟಕ್ಕೋ? ಮತ್ತೀಗ ಎಷ್ಟು ಗಂಟೆ? ನಿಂಗೆ ಮಂಡೆ ಗಿಂಡೆ ಉಂಟಾ? ನೀನೊಬ್ಬ ಸ್ಟೂಡೆಂಟಾ?” ಎಂದು ಗರಂ ಆಗಿ ಗುರಗುಟ್ಟಿದರು. “ಸರ್ ಸ್ನಾನ ಮಾಡಾಕ್ ಲೇಟ್ ಆಯ್ತ ರೀ, ನಮ್ಮವ್ವ ಬ್ಯಾಗ್ ಏಳಾಂಗಿಲ್ಲಾರೀ, ನೀರು ಕಾಯಿಸಿ ಒಲೆ ಹಚ್ಚಿ ನೀರು ಕಾಯುವರೆಗೂ ನಾನ್ ಎಳಾಂಗಿಲ್ಲಾರೀ,” ಎಂದ. ತೀರಾ ಸಲೀಸಾಗಿ ಸುಳ್ಳು ಹೇಳುತ್ತಿದ್ದಾನೆ ಎಂಬ ಗ್ರಹಿಕೆ ಬರುವಂತೆ ನುಡಿಯುತ್ತಿದ್ದರೆ ಕನ್ನಡ ಶಿಕ್ಷಕರು ನಖಶಿಖಾಂತ ಉರಿಯತೊಡಗಿದರು. ಇನ್ನು ಮುಂದೆ ಹೀಗೆ ತಡಮಾಡುವುದಿಲ್ಲವೆಂದು ವಿನಂತಿಸಿ ಅಂತೂ ಆತ ತರಗತಿಗೆ ನಡೆದ.ಇಂಗ್ಲಿಷು ಅಷ್ಟಾಗಿ ಬರದ ಆತ ಸಂಸೃತ ಆಯ್ದುಕೊಂಡಿದ್ದ.ಮೊದಲ ತರಗತಿ ಸಂಸ್ಕೃತ. ಪಾಠ ಮಾಡಬಂದವರು ನಡುವಯಸ್ಸಿನ ಆದರೂ ನವ ಯುವಕನ ಪೋಸು ಕೊಡುತ್ತಿದ್ದ ಆರ್ ಕೆ. ಅವರ ಮುಂದಿನ ಹೆಸರನ್ನು ನಾನು ಹೇಳುವುದು ನೀವು ಕೇಳುವುದು ಬೇಡವೇ ಬೇಡ.ಆ ದಿನದ ಪಾಠದ ವಿಷಯ ಪಾಪ ಪುಣ್ಯ. ಪಾಪ ಪುಣ್ಯಗಳ ಬಗ್ಗೆ ಉಪನ್ಯಾಸಕರು ದೀರ್ಘವಾಗಿ ಭಾಷಣ ಮಾಡತೊಡಗಿದರು.ವ್ಯಾಸರ ಭಾರತವನ್ನು, ಹದಿನೆಂಟು ಪುರಾಣಗಳ ಆಧಾರಗಳನ್ನು ಉಲ್ಲೇಖಿಸಿ “ಪರರಿಗೆ ಉಪಕಾರ ಮಾಡುವುದೇ ಪುಣ್ಯ,ಪರರ ಪೀಡನೆಯೇ ಪಾಪ” ಎನ್ನುತ್ತಿದ್ದರು. ತಟ್ಟನೆ ಆ ವಿದ್ಯಾರ್ಥಿ ಎದ್ದು ಪ್ರಶ್ನಿಸಿದ “ಸರ್, ಸುಂದರವಾಗಿರುವ ಹುಡುಗಿಯರಿಗೆ ಹೆಚ್ಚು ಅಂಕ ನೀಡಿ, ಬುದ್ದಿವಂತ ಆದರೆ ತುಂಟ ಹುಡುಗರಿಗೆ ಕಡಿಮೆ ಅಂಕ ನೀಡುವುದು ಪಾಪವೋ? ಅಥವಾ ಪುಣ್ಯವೋ?” ಎಂದ. ಉತ್ತರ ಕೊಡಲಾಗದ ಉಪನ್ಯಾಸಕರು ಬೆಸ್ತುಬಿದ್ದು ತಡಬಡಿಸತೊಡಗಿದರು. ಮತ್ತೆ ಉಪನ್ಯಾಸಕರು ಉಪನ್ಯಾಸ ನೀಡದೆ, “ಯಾಕೋ ಹನುಮ ಬೆಳ್ಳಂಬೆಳಿಗ್ಗೆ ಅಮಲೇರಿದಂಗೆ ಬಡಬಡಿಸ್ತಿ.ಚಂದಾ ಗಿಂದ ತಗೊಂಡು ನನಗೇನಾಗಬೇಕು.ಪಾಠ ಸರ್ಯಾಗ ಕಲಿಯೂದ ಕಲಿ. ಬಡವ “ ಎಂದು ಗದರಿಸಿ“ಎಲ್ರೂ ಇಲ್ಲಿ ಕೇಳಿ, ಒಂದು ಸುಭಾಷಿತ ಕೊಡ್ತಿನಿ, ಬರ್ಕೋಳ್ಳಿ” ಎಂದು ಹೇಳಿ “ಮರ್ಕಟಸ್ಯ ಸುರಾಪಾನಂ ಮಧ್ಯೆ ವೃಶ್ಚಿಕ ದ್ವಂಶನಂ ತನ್ಮದ್ಯೆ ಭೂತಸಂಚಾರೋ ಯದ್ವಾತದ್ವಾ ಭವಿಷ್ಯತಿ” ಎಂದು ಬರೆಸಿ ನಾಳೆ ಅದರ ಕನ್ನಡ ಅನುವಾದ ಉತ್ತರ ಬರೆದು ತರುವಂತೆ ಹೇಳಿದರು.ಯಾರು ತರುವುದಿಲ್ಲವೋ ಅವರಿಗೆ ಇಂಟರ್ನಲ್ ಮಾರ್ಕ್ಸ ಕೊಡುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದು ಹೊರನಡೆದರು. ಅದು ಇಂಟರ್ವೆಲ್. ಹನುಮ ಮತ್ತವನ ಗೆಳೆಯರು ತಲೆಕೆರೆದು ಕೊಳ್ಳುತ್ತ ಅನುವಾದ ಮಾಡತೊಡಗಿದರು. ಅಲ್ಲೆ ಒಬ್ಬ ಗೆಳೆಯ ಅಂದ “ಹನಮ್ಯಾ ಅವ್ರ ನಿಂಗ್ ಇದನ್ನ ಟೊಂಟಾಗ್ ಕೊಟ್ಟಾಂಗೈತಲೇ!.ಮರ್ಕಟ ಅಂದ್ರ ಮಂಗಾ ಅಲ್ಲೇನ್ಲೇ? ಮತ್ತ ನಿನ್ನ ಹೆಸರು ಹನುಮ, ಸರಿಯಾಯ್ತ ಮಗನೇ, ಸೇರಿಗೆ ಸವ್ವಾಸೇರು. ನೀ ಸ್ಟುಡೆಂಟಲೇ, ಅವ್ರು ಲೆಕ್ಚ್ರು. ನಿನ್ನ ಕೈಯಾಗ ಅವರನ್ನ ಯಾಮಾರ್ಸೋದಕ್ಕ ಆಗಾಂಗಿಲಲೇ” ಎಂದ. ಎಳೆ ಪ್ರಾಯದ ಬಿಸಿರಕ್ತದ ಹನುಮನ ಬಡಕಲು ಶರೀರವೂ ಕೊತಕೊತ ಕುದಿಯಿತು. ಅವನೆಂದ “ ಹೌದಾ! ಹಾಗಾಂದ್ರೆ ನೋಡೆ ಬೀಡುವಾ. ನಾನ ಅದರ ಉತ್ತರ ಬರಿದೆ ಬರಿತೀನಿ. ಸರ್ ಯಾವಾಗ್ಲೂ ನೆನಪಿಡೋ ಹಾಂಗ ಬರಿತೀನಿ. ಈಗ್ಲೆ ಅದನ್ ಹೇಳಾಂಗಿಲ್ಲ, ಮಾಡೇ ತೋರಸ್ತೀನಿ. ನೋಡ್ಲೇ ” ಅಂದ. ಆದರೂ ಅವನ ಮುಖ ಜೋತು ಬಿದ್ದಿತ್ತು. ತಾನು ಮಾಡುವುದು ಸರಿಯೋ? ತಪ್ಪೋ? ಡೋಲಾಯಮಾನ ಮನಸ್ಥಿತಿ. ಆದರೂ ಹುಡುಗರೆದುರಿಗೆ ತಾನು ಹೀರೋ ಆಗಬೇಕೆನ್ನುವ ಛಲ. ಇಷ್ಟಾಗಿಯೂ ಶಿಕ್ಷಕರ ಅಂತಃಕರಣದ ಉದಾರೀಕರಣ ಬಲ್ಲವನಾಗಿದ್ದ. ತಾನಾದರೋ ಹಾಗೆ ಮಾಡಿದರೆ ಉಪನ್ಯಾಸಕರು ಮಹಾ ಏನು ಮಾಡಿಯಾರು? ಒಂದೆರಡು ಬೈದು ಬುದ್ದಿ ಹೇಳತಾರು,ಅಷ್ಟೇ ತಾನೆ? ನೋಡೆ ಬಿಡುವ ನನ್ನ ಜಿದ್ದು ಹೆಚ್ಚೋ ಆರ್.ಕೆ ಜಿದ್ದು ಹೆಚ್ಚೋ? ಎಂದುಕೊಳ್ಳುತ್ತ ಮಾರನೆ ದಿನ ತರಗತಿಗೆ ಕೊಂಚ ಮೊದಲೆ ಬಂದ. ಮೊದಲನೆ ತರಗತಿಯೇ ಸಂಸ್ಕೃತ. ಮೊದಲೆ ಕಾಲೇಜಿಗೆ ಬಂದ ಆತ ಮಾಡಿದ ಕೆಲಸವೆಂದರೆ ಬ್ಲಾಕ್ ಬೋರ್ಡನ್ನು ಚೆನ್ನಾಗಿ ಒರೆಸಿ, ಒಂದು ಮೂಲೆಯಿಂದ ಮಂಗನ ಆಗಮನದ ಚಿತ್ರ ಬಿಡಿಸಿದ. ಆದರೆ ಅದರ ಮೂತಿ ಮಾತ್ರ ತನ್ನ ಮುಖದಂತೆ ಬರೆದ.ಕೈಯಲ್ಲಿ ಬಾಟಲ್ ಹಿಡಿಸಿದ, ಮಂಗನ ಕೆಳಭಾಗದಲ್ಲಿ ಎಡನಿತಂಬಕ್ಕೆ ಕಚ್ಚುತ್ತಿರುವ ಚೇಳೊಂದನ್ನು ಬಿಡಿಸಿದ.ಈಗ ಮತ್ತೊಂದು ಎರಡನೆಯ ಚಿತ್ರ ಬರೆದ ಮಂಗನ ದಶಾವತಾರದ ಚಿತ್ರ.ಅಮಲೇರಿದ ಮಂಗನ ಮುಖದ ಹನುಮನ ಮಂಗಚೇಷ್ಟೆಯ ಚಿತ್ರ, ಕೊನೆಯಲ್ಲಿ ಮಂಗನಿಂದ ಬಚಾವಾಗಲು ಮರವೇರಿದ ಉಪನ್ಯಾಸಕರ ಚಿತ್ರ ಬರೆದು ನಿರುಮ್ಮಳನಾದ. ಅಷ್ಟೇ ಅಲ್ಲ ಯಾರಾದರೂ ಅದನ್ನು ಅಳಿಸಬಹುದೆಂದು ತರಗತಿ ಬಿಟ್ಟು ಹೊರಬರದೆ ಕಾಯುತ್ತ ಕುಳಿತ. ಸಮಯವಾಗುತ್ತಲೇ ತರಗತಿ ಭರ್ತಿಯಾಗತೊಡಗಿತು. ಹೆಣ್ಣು ಹುಡುಗಿಯರು ಕಣ್ಣು ಕಣ್ಣು ಬಿಟ್ಟು ಈ ಅದ್ಭುತ ಚಿತ್ರ ನೋಡಿ ವಿವರಿಸತೊಡಗಿದರು. ಈಗ ಅದಕ್ಕೆ ರೆಕ್ಕೆ ಪುಕ್ಕ ಎಲ್ಲ ಹುಟ್ಟಿಕೊಂಡವು.ಎಲ್ಲರ ಮುಂದೆ ಕಾಲರ್ ಎತ್ತಿ ಎತ್ತಿ ಹನುಮ ಭುಜ ಕುಣಿಸಿದ.ಪ್ರಾರ್ಥನೆಗೂ ಹೋಗದೆ ಉಪನ್ಯಾಸಕರು ಬರುವವರೆಗೂ ಚಿತ್ರ ಕಾಯುತ್ತ ಕುಳಿತ. ಕೈಯಲ್ಲೊಂದು ಹಾಜರಿ ಪುಸ್ತಕ ಮತ್ತೊಂದು ಪಠ್ಯ ಪುಸ್ತಕ ಹಿಡಿದು ಠಾಕುಠೀಕಾಗಿ ಬರುತ್ತಿರುವ ಉಪನ್ಯಾಸಕರಾದ ಆರ್. ಕೆ. ನ ನೋಡಿ ಹುಡುಗಿಯರು ಮುಸಿಮುಸಿ ನಕ್ಕರೆ, ಹನಮ್ಯಾ ಮತ್ತವನ ಕೋತಿ ದಂಡು ತಣ್ಣಗೆ ಕುಳಿತಿತ್ತು. ಹಾಜರಿ ಗಿಜರಿ ಮುಗಿಸಿ ಈಗ ಗುರುಗಳು ಬೋರ್ಡಿನ ಕಡೆ ತಿರುಗುತ್ತಲೂ ಆಶ್ಚರ್ಯ!! . ನಿನ್ನೆ ತಾವು ವಿದ್ಯಾರ್ಥಿಗಳಿಗೆ ನೀಡಿದ ಸಮಸ್ಯೆ ಅವರಿಗೆ ನೆನಪಿರಲಿಲ್ಲ. ‘ಎಂಥದ್ಭುತ ! ಭಲೇ, ಚಿತ್ತ ಚಾಂಚಲ್ಯಕ್ಕೆ ಎಂಥೊಳ್ಳೆ ಚಿತ್ರ. ಯಾರು ಬರೆದವರು?’ ಎಂದು ಕೇಳುತ್ತಲೂ ಮಕ್ಕಳಲ್ಲಾ ಹನುಮನ ಕಡೆ ನೋಡುತ್ತಲೂ ಗುರುಗಳಿಗೆ ಆಶ್ಚರ್ಯ . .’ ಭಲೇ’ ಎಂದರು ಮನದಲ್ಲೇ. “ ಎಂಥ ಅದ್ಭುತ ಕಲೆಗಾರ! ನಿನ್ನೊಳಗೊಂದು ಈ ವ್ಯಕ್ತಿ ಇರುವುದು ನನಗೆ ತಿಳಿದಿರಲಿಲ್ಲ,ಹನುಮಾ, ನೀನೊಬ್ಬ ಶ್ರೇಷ್ಠ ಚಿತ್ರಗಾರ. ನಿನ್ನ ಸಾಮರ್ಥ್ಯದ ಅರಿವು ನಿನಗೆ ಇಲ್ಲ. ಇರಲಿ ಬಿಡು. ನಿನಗೊಬ್ಬರನ್ನು ಪರಿಚಯಿಸಿ ಕೊಡುತ್ತೇನೆ. ಅವರ ಹತ್ತಿರ ಸರಿಯಾಗಿ ಪ್ರಾಕ್ಟೀಸು ಮಾಡು. ಹಣದ ಬಗ್ಗೆ ಚಿಂತಿಸಬೇಡ. ಹೇಗಾದರೂ ಹೊಂದಿಸೋಣ. ನೀನು ಮುಂದೆ ಬಂದರೆ ಸಾಕು” ಎನ್ನುತ್ತಲೂ, ಇವೆಲ್ಲವನ್ನು ನಿರೀಕ್ಷಿಸದೆ, ಉಪನ್ಯಾಸಕರು ತನಗೆ ಛೀಮಾರಿ ಹಾಕಿ ಹೊರಗೆ ಕಳುಹಿಸಬಹುದೆಂದು ಗ್ರಹಿಸಿದ್ದ ಆತನ ಲೆಕ್ಕಾಚಾರ ತಿರುವು ಮುರುವಾಗಿತ್ತು.ಹನುಮ ನಿಜಕ್ಕೂ ಈಗ ಮಂಗನಂತಾದ.ಕನಕ ಮಣಕ ಆದಂಗಾದ.ಅದರ ಕಾರಣ ಹೇಳ ಹೊರಟ. ಆಗಲಿಲ್ಲ. ಕಣ್ಣಾಲಿಗಳು ತುಂಬಿಕೊಂಡವು. ಗುರುವಿನ ಮುಂದೆ ಗುಲಾಮನಾಗಬೇಕೆನಿಸಿತು. ಇವರಿಗೆ ತಾನು ಎಷ್ಟು ಸತಾಯಿಸಿದೆ. ಅರ್ಥವಾಗಲಿಲ್ಲವೇ? ಅಂದುಕೊಂಡ. ತಪ್ಪಾಯಿತೆಂದು ಅಂಗಲಾಚಬೇಕೆಂದು ಕೊಂಡ. ಯಾವುದನ್ನು ಮಾಡಲಾಗದೆ ಈಗ ಮುಸಿ ಮುಸಿ ಅಳತೊಡಗಿದ. ಅವನೊಳಗಿನ ಅಂತಃ ಪ್ರಜ್ಞೆ ಎಚ್ಚರಗೊಂಡಿತ್ತು. ಎಲ್ಲವನ್ನೂ ಸಲೀಸಾಗಿ ತೆಗೆದುಕೊಂಡು ಬದುಕುತ್ತಿದ್ದ ಹುಡುಗನ ಮನೆ ಸ್ಥಿತಿ ತೀರ ಹದಗೆಟ್ಟಿದ್ದಾಗಿತ್ತು. ಅದನ್ನು ತನ್ನ ವಿಚಿತ್ರ ಶೈಲಿಗಳಿಂದ ನಡೆ ನುಡಿಗಳಿಂದ ಮರೆಯಲು ಬಯಸುತ್ತಿದ್ದ. ಕಾಯಿಲೆಯಿಂದ ಹಾಸಿಗೆ ಹಿಡಿದ ತಾಯಿ, ಸದಾ ಕುಡಿದು ಬರುತ್ತಿದ್ದ ತಂದೆ, ಈ ಮಧ್ಯೆ ಒಡಹುಟ್ಟಿದ ಮುದ್ದು ತಂಗಿ, ಆಕೆಯ ಜವಾಬ್ದಾರಿ ಎಲ್ಲವನ್ನೂ ಎಳೆಯ ಪ್ರಾಯದ ಹುಡುಗ ಹೊತ್ತಿಕೊಂಡಿದ್ದ. ಬೆಳಿಗ್ಗೆ ತಡವಾಗುತ್ತಿದ್ದ ಕಾರಣ, ಮನೆಗುಡಿಸಿ, ನೀರು ತುಂಬಿ, ತಿಂಡಿ ಮಾಡಿ,ತಾಯಿಗೆ ತಂಗಿಗೆ ತಿಂಡಿ ಕೊಟ್ಟು, ತಾನು ಅರ್ಧಂಬರ್ಧ ತಿಂದು, ಬರುತ್ತಿದ್ದ ಆತ ಸುಮ್ಮನೆ ಸುಳ್ಳು ಹೇಳುತ್ತಿದ್ದ. ಕಾಲೇಜು ಸಮಯದ ನಂತರ ಅಂಗಡಿಯೊಂದರಲ್ಲಿ ಲೆಕ್ಕ ಪತ್ರ ಬರೆಯುವ ಕೆಲಸಕ್ಕೆ ಹೋಗುತ್ತಿದ್ದ ಆತ ಮನೆಯ ಖರ್ಚು ವೆಚ್ಚವನ್ನೆಲ್ಲಾ ತಾನೆ ನಿಭಾಯಿಸುತ್ತಿದ್ದ.ಕಾಲೇಜಿಗೆ ತಡವಾಗಿ ಬರುವುದಕ್ಕೆ ನಿಜ ಕಾರಣ ನೀಡಲು ಪ್ರಾಯದ ಜಂಭ ಅಡ್ಡಬರುತ್ತಿತ್ತು. ‘ತಾನೇಕೆ ಇನ್ನೊಬ್ಬರ ಎದುರಿಗೆ ತಲೆ ಬಾಗಿಸಲಿ? ಎಂಬ ಒಣ ಪ್ರತಿಷ್ಠೆ ಎಲ್ಲವೂ ಆತನಲ್ಲಿತ್ತು. ಆದರೀಗ ಹಾಗಾಗಲಿಲ್ಲ.ಒಂದು ಮನಸ್ಸು ಬೇಡ ಬೇಡವೆಂದರೂ ಮತ್ತೊಂದು ಮನಸ್ಸು ತನ್ನ ಮನೆಯ ರಹಸ್ಯವನ್ನೆಲ್ಲಾ ಬಿಚ್ಚಿಟ್ಟಿತು ಮತ್ತು ತನ್ನ ಮಂಗಚೇಷ್ಟೇಯ ಆಲೋಚನೆಯನ್ನು ಹೊರಗೆಡುವಿದ.ಆತ ಹೀಗೆಂದ “ಸರ್, ಸರ್, ನನ್ನ ನೀವು ಕ್ಷಮಿಸಬೇಕ್ರೀ. ನಾನು ನಿಮಗೆ ಬುದ್ಧಿ ಕಲಿಸ್ತೀನಿ ಅಂತ ಹುಡುಗರತ್ರ ಹೇಳಕೊಂಡಿದ್ದೇರಿ..ನಂದೆಲ್ಲಾ ತಪ್ಪಾಗೈತ್ರಿ ಸರ್ ಹೊಟ್ಯಾಗ ಹಾಕ್ಕೊಳ್ರೀ, ಸರ್. ನನ್ನ ಗೆಳೇರಲ್ಲಾ ಅಂದ್ರು ಅಂತ ನಿಮಗಿಂತ ನಾನೆ ಬುದ್ಧಿವಂತ ಅಂತಾ ತೋರ್ಸಾಕ ಹೊಂಟಿದ್ದರ್ರೀ. ಈಗ ಗುರುತಾತ್ರೀ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಅಂತ ಶರೀಫರು ಯಾಕ್ ಹಾಡಿದ್ರೂ ಅಂತ”. ಎನ್ನುತ್ತ ಅವರ ಕಾಲಿಗೆ ಬಿದ್ದ.ಅಷ್ಟೊತ್ತಿಗೆ ಕನ್ನಡ ತರಗತಿ ಪ್ರಾರಂಭವಾಗುತ್ತಲೇ ಅವರೂ ಕ್ಲಾಸಿಗೆ ಬರಲು ಈ ದೃಶ್ಯ ಮನಕಲುಕಿತು. ಆವರೆಗೆ ಆತನ ಮೇಲಿದ್ದ ಕೋಪ,ಅಸಹನೆ ಮಾಯವಾಗಿ ಕರುಣೆ ತುಂಬಿಕೊಂಡಿತು.ಹೆಣ್ಣು ಹುಡುಗಿಯರಂತೂ ಆತನನ್ನು ಅಭಿಮಾನದಿಂದ ನೋಡತೊಡಗಿದರು. ಈಗ ನಿಜಕ್ಕೂ ಆತ ಹೀರೋ ಆಗಿದ್ದ ಬರಿಯ ಹುಡುಗಿಯರ ಕಣ್ಣಲ್ಲಿ ಮಾತ್ರವಲ್ಲ. ಶಿಕ್ಷಕರು, ಉಳಿದ ಸಹಪಾಠಿಗಳ ದೃಷ್ಠಿಯಲ್ಲೂ ಹನುಮನಿಗೆ ಹನುಮನೇ ಸಾಟಿ ಎನಿಸಿಕೊಂಡುಬಿಟ್ಟ. ಅದರಲ್ಲಿ ಬಹಳ ಆನಂದ ಪಟ್ಟವರೆಂದರೆ ಕನ್ನಡ ಮೇಷ್ಟ್ರು ಸದಾ ಕನ್ನಡ ತರಗತಿಗೆ ಗೈರುಹಾಜರಾಗಿ ಗುಂಪು ಕಟ್ಟಿಕೊಂಡು ಉಂಡಾಡಿ ಗುಂಡನ ಹಾಗೆ ಕಾಲೇಜು ಕ್ಯಾಂಪಸ್ ಸುತ್ತುತ್ತ ಆಗಾಗ ವಿಕಾರವಾಗಿ ಅವರನ್ನು ಅಣುಕಿಸುವ ಆತನ ಆಟಕ್ಕೆ ಅವರ ಮನ ರೋಸಿ ಹೋಗಿತ್ತು. ಪಾಠಕ್ಕೆ ಬಾ ಎಂದು ಕರೆದರೂ”ಸರ್ ನಾನು ಕ್ಲಾಸಿಗ್ ಕೂರದಿದ್ರೂ ಪಾಸಾಗ್ತೀನಿ ನೋಡಿ.” ಎಂದು ಸವಾಲೆಸೆದು ಅವರ ಮುಖಭಂಗ ಮಾಡಿದ್ದ. ಆದರೆ ಈಗ ಅವರು ಅದನ್ನೆಲ್ಲ ಮರೆತು ಆತನ ಹರಸತೊಡಗಿದರು. ತಮ್ಮ ಹಳೆಯ ಕಾಲೇಜು ದಿನಗಳನ್ನು ನೆನಪಿಸಿಕೊಂಡು “ಆ ವಯಸ್ಸು ಮಾರಾಯ, ಈಗ ನಿಂಗೆ ಬೈದ್ರು ಒಂದಕಾಲಕ್ಕೆ ನಾವು ಸಾಕಷ್ಟು ಸೌಖ್ಯ ಕೊಟ್ಟಿದ್ದೆವು ನಮ್ಮ ಮಾಷ್ಟುçಗಳಿಗೆ” ಎನ್ನುತ್ತ ಆತನ ಬೆನ್ನು ತಟ್ಟಿದರು. ಸತತ ಪರಿಶ್ರಮ ಪಟ್ಟು ಚೆನ್ನಾಗಿ ಓದಿದ. ಆ ವರ್ಷದ ಆದರ್ಶ ವಿದ್ಯಾರ್ಥಿ ಸ್ಥಾನವನ್ನು ಮಾತ್ರವಲ್ಲದೇ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿ ಕನ್ನಡ ಮಾಧ್ಯಮದಲ್ಲಿ ತಾಲೂಕಿಗೆ ಹೆಚ್ಚು ಅಂಕ ಗಳಿಸಿ ಎಲ್ಲರ ಮೆಚ್ಚುಗೆ ಗಳಿಸಿದ. “ಹುಡುಗಾಟದ ಹುಂಬತನದಲ್ಲೂ ಮುಗ್ಧ ಮನಸ್ಸಿರುವುದು” ಎಂಬುದಕ್ಕೆ ಸಾಕ್ಷಿಯೂ ಆದ.ತಪ್ಪು ನಡೆದಾಗ ಶಿಕ್ಷಿಸದೆ ಆ ತಪ್ಪಿನಲ್ಲೂ ಕೆಲವೊಮ್ಮೆ ಇರುವ ಒಪ್ಪನ್ನು ಒಡಮೂಡಿಸಿದ ಸಂಸ್ಕೃತ ಶಿಕ್ಷಕರ ಸುಸಂಸ್ಕೃತ ವರ್ತನೆ ಆತನ ಬದಲಾವಣೆಗೆ ದಾರಿಯಾಯಿತು.
ಪರಿವರ್ತನೆಗೆ ದಾರಿ ಯಾವುದಾದರೇನು? Read Post »
ಅಂಕಣ ಬರಹ ಕಗ್ಗಗಳ ಲೋಕ ಆದರಣೀಯ ಡಾII ಡಿ. ವಿ. ಗುಂಡಪ್ಪನವರು ರಚಿಸಿದ ‘ಮಂಕುತಿಮ್ಮನ ಕಗ್ಗ’ ಒಂದು ಮೇರುಕೃತಿ. ಅವರ ಒಂದೊಂದು ಮುಕ್ತಕವೂ ಕೂಡ ಸಾರ್ವಕಾಲಿಕ ಸತ್ಯ! ಜೀವನದಲ್ಲಿ ಎದುರಾಗುವ ಸಾವಿರಾರು ಪ್ರಶ್ನೆಗಳಿಗೆ ತತ್ವಶಾಸ್ತ್ರ,ಸ್ವಾನುಭವ ಮತ್ತು ಆಧ್ಯಾತ್ಮದ ಹಿನ್ನೆಲೆಯಲ್ಲಿ ಉತ್ತರ ನೀಡುವ ಕಗ್ಗಗಳು ಓದುಗರಿಗೆ ಆಪ್ತವಾಗಿ ಬಿಡುತ್ತವೆ. ಒಬ್ಬ ಸಾಮಾನ್ಯ ಮನುಷ್ಯನಂತೆ ಮೈತ್ರಿಭಾವದಿಂದ ಬರೆದ ಈ ಕಗ್ಗಗಳು ಅಸಂಖ್ಯ ಮಂದಿಗೆ ಸಾಂತ್ವನ ನೀಡುತ್ತವೆ. “ಎಲ್ಲದರಲ್ಲೂ, ಎಲ್ಲರಲ್ಲೂ ಒಳ್ಳೆಯದನ್ನೇ ಕಂಡು , ಜೀವನದ ಸೊಬಗನ್ನು ಸವಿಯಬೇಕು” ಎಂದು ದಾರಿತೋರುವ ದಿವ್ಯಚೇತನ ನಮ್ಮ ಗುಂಡಪ್ಪನವರು. ಹೊಸ ಪೀಳಿಗೆಯ ಓದುಗರಿಗೆ ಡಿ.ವಿ.ಜಿ.ಯವರ ಕಗ್ಗಗಳ ಪರಿಚಯಿಸುವುದು ನನ್ನೀ ಬರಹಗಳ ಉದ್ದೇಶವಾಗಿದೆ ಮುಕ್ತಕ- ೬೦೦ ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ I ಕುದುರೆ ನೀನ್ , ಅವನು ಪೇಳ್ದಂತೆ ಪಯಣಿಗರು II ಮದುವೆಗೋ ಮಸಣಕೋ ಹೋಗೆಂದ ಕಡೆಗೋಡು I ಪದ ಕುಸಿಯೆ ನೆಲವಿಹುದು ಮಂಕುತಿಮ್ಮ II ಭಾವಾರ್ಥ : ನಮ್ಮ ಬದುಕೇ ಒಂದು ಜಟಕಾಬಂಡಿ. ಆ ಬಂಡಿಯನ್ನು ಎಳೆದುಕೊಂಡು ಹೋಗುವ ಕುದುರೆಗಳು ನಾವು. ಬಂಡಿಯನ್ನೆಳೆಯುವುದು ನಮ್ಮ ಕಾರ್ಯವೇ ಹೊರತು ದಾರಿಯನ್ನು ಆಯ್ಕೆ ಮಾಡುವ ಹಕ್ಕು ನಮಗಿಲ್ಲ. ಬಂಡಿಯ ಒಡೆಯನಾದ ವಿಧಿಯು ತೋರಿದ ಹಾದಿಯಲ್ಲೇ ನಾವು ನಡೆಯಬೇಕು. ಅದು ಸುಖದ ಹಾದಿಯೋ, ದುಃಖದ ಹಾದಿಯೋ – ನಾವದನ್ನು ಆಯ್ಕೆ ಮಾಡುವಂತಿಲ್ಲ. ಬಾಲ್ಯ, ಯೌವನಾವಸ್ಥೆಯಲ್ಲಿ ಓಡಿದ ಪಾದಗಳು ವೃದ್ಧಾಪ್ಯ ತಲುಪಿದಾಗ ಸೋತು ಹೋಗಿ ಕುಸಿದುಬಿದ್ದಾಗ , ಭೂಮಿಯ ಮೇಲೆ ದಹನವೋ ದಫನವೋ ಆಗುವಲ್ಲಿಗೆ ನಮ್ಮ ಬದುಕಿನ ಓಟ ಕೊನೆಗೊಳ್ಳುತ್ತದೆ. ಬದುಕೆಂದರೆ ಇಷ್ಟೇ!! ಮುಕ್ತಕ – ೬೬೧ ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ Iಫಲ ಮಾಗುವಂದು ತುತ್ತೂರಿ ದನಿಯಿಲ್ಲIIಬೆಳಕೀವ ಸೂರ್ಯಚಂದ್ರರದೊಂದು ಸದ್ದಿಲ್ಲIಹೊಲಿ ನಿನ್ನ ತುಟಿಗಳನು ಮಂಕುತಿಮ್ಮ ಭಾವಾರ್ಥ: ಅತೀ ಸೂಕ್ಷ್ಮವಾದ ಮೊಳಕೆಗೆ ಭೂಮಿಯ ಮಣ್ಣಿನ ಪದರವನ್ನು ಒಡೆದು ಹೊರಬರುವುದು ಸುಲಭದ ಮಾತಲ್ಲ. ಆದರೂ ಅದು ತಾನೊಂದು ದೊಡ್ಡ ಸಾಧನೆಯನ್ನು ಮಾಡುತ್ತಿದ್ದೇನೆಂದು ಕೂಗಿ ಹೇಳಲ್ಲ. ಮಧುರವಾದ ಸವಿಯನ್ನು ಕೊಡುವ ಫಲವು ತನ್ನ ಬಗ್ಗೆ ಕೊಚ್ಚಿಕೊಳ್ಳುವುದಿಲ್ಲ. ಸೌರವ್ಯೂಹಕ್ಕೆ ಒಡೆಯನಾದ ಸೂರ್ಯನು ಹಗಲು ಹೊತ್ತು ಬೆಳಕನ್ನು ನೀಡಿದರೆ, ರಾತ್ರಿ ಚಂದ್ರನು ತಂಪನ್ನೀಯುವನು. ಇವರು ಮೌನವಾಗಿ ತಮ್ಮ ಕಾಯಕವನ್ನು ಮಾಡುವರೇ ಹೊರತು ತಮ್ಮ ಹಿರಿತನದ ಬಗ್ಗೆ ಜಂಬ ಪಟ್ಟುಕೊಂಡಿಲ್ಲ. ಇವರೆಲ್ಲಾ ತಮ್ಮ ಪಾಡಿಗೆ ತಮ್ಮ ಕಾಯಕವನ್ನು ಮೌನವಾಗಿ ಮಾಡುತ್ತಿರುವಾಗ ನೀನ್ಯಾಕೆ ಅವರಂತೆ ಮೌನವಾಗಿರಬಾರದು ಎಂದು ಮನುಷ್ಯರನ್ನು ಪೂಜ್ಯ ಡಿ.ವಿ.ಜಿ ಯವರು ಕೇಳುತ್ತಾರೆ. ******************************** ವಾಣಿ ಸುರೇಶ್ ಕಾಮತ್ ವಾಣಿ ಸುರೇಶ್ ಕಾಮತ್ , ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಇವರು ಬೆಂಗಳೂರು ವಾಸಿ. ಓದು ಮತ್ತು ತೋಟಗಾರಿಕೆ ಇವರ ಹವ್ಯಾಸ.
ಲಂಕೇಶ್ ವಿಶೇಷ ಪಿ.ಲಂಕೇಶ್ ಎಂಬ ‘ಹುಳಿಮಾವಿನ ಮರ’..! ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರು. ಪತ್ರಕರ್ತ-ಸಾಹಿತಿಯಾಗಿ ಜನಪ್ರಿಯರಾಗಿರುವ ಪಾಳ್ಯದ ಲಂಕೇಶ್ ಅವರ ಬದುಕು-ಬರಹ ವೈವಿಧ್ಯದಿಂದ ಕೂಡಿದೆ. ಕವಿಯಾಗಿ, ಕಥೆಗಾರನಾಗಿ, ಕಾದಂಬರಿಕಾರನಾಗಿ, ಅನುವಾದಕನಾಗಿ, ನಾಟಕಕಾರನಾಗಿ, ನಟನಾಗಿ, ಚಲನಚಿತ್ರ ನಿರ್ದೇಶಕನಾಗಿ, ವಾರಪತ್ರಿಕೆ ಲಂಕೇಶ್ ಸಂಪಾದಕನಾಗಿ, ಕೃಷಿಕನಾಗಿಯೂ ಪ್ರಸಿದ್ಧನಾಗಿ ಹೆಸರು ಮಾಡಿದವರು ಪಿ.ಲಂಕೇಶ್ ಅವರು. ಹೀಗೆಯೇ ಅವರ ಪ್ರತಿಭೆಗೆ ಹಲವು ಮುಖ. ಕೆಲಸ ಮಾಡಿದ ಕ್ಷೇತ್ರದಲ್ಲೆಲ್ಲ ತನ್ನದೇ ಛಾಪು ಮೂಡಿಸಿದವರು ಪಿ.ಲಂಕೇಶ್. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೊನಗವಳ್ಳಿ 1935ರ ಮಾರ್ಚ್ 8 ರಂದು ಜನಿಸಿದವರು. ತಂದೆ ನಂದಿ ಬಸಪ್ಪ, ತಾಯಿ ದೇವೀರಮ್ಮ. ಕೊನಗವಳ್ಳಿ ಮತ್ತು ಹಾರನಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದರು. ಮಾಧ್ಯಮಿಕ ವಿದ್ಯಾಭ್ಯಾಸ ಮಾಡಿದ ಅವರು ಪ್ರೌಢಶಾಲೆ ಮತ್ತು ಇಂಟರ್ ಮೀಡಿಯಟ್ಗಳನ್ನು ಶಿವಮೊಗ್ಗದಲ್ಲಿ ಮುಗಿಸಿದರು. ಬೆಂಗಳೂರು ಸೆಂಟ್ರಲ್ ಕಾಲೇಜ್ನಲ್ಲಿ ಬಿ. ಎ. (ಆನರ್ಸ್), ಮೈಸೂರಿನಲ್ಲಿ ಎಂ.ಎ. (ಇಂಗ್ಲಿಷ್) ಅಧ್ಯಯನ ನಡೆಸಿ ಅವರು ಶಿವಮೊಗ್ಗದಲ್ಲಿ ಅಧ್ಯಾಪಕ ವೃತ್ತಿ ಆರಂಭ (1959) ಮಾಡಿದವರು. ಬೆಂಗಳೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದಲ್ಲಿ ಎರಡು ದಶಕಗಳ ಕಾಲ ಅಧ್ಯಾಪಕರಾಗಿದ್ದ ಪಿ.ಲಂಕೇಶ್ ರು ಸ್ವಯಂ ನಿವೃತ್ತಿ ಪಡೆದು ನಂತರ ಪತ್ರಿಕೋದ್ಯಮ ಪ್ರವೇಶಿಸಿದವರು. ‘ಲಂಕೇಶ್ ಪತ್ರಿಕೆ’ಯು ಪಿ.ಲಂಕೇಶ್ ಅವರ ಹರಿತ ಬರಹಗಳ ಮೂಲಕ ಕನ್ನಡ ಜಾಣ-ಜಾಣೆಯರಿಗೆಲ್ಲ ಪರಿಚಿತರಾದವರು. ವಿದ್ಯಾರ್ಥಿ ದೆಸೆಯಿಂದಲೂ ರಾಜಕೀಯದಲ್ಲಿ ಆಸಕ್ತಿ ತಳೆದಿದ್ದ ಲಂಕೇಶ್ ಅವರಿಗೆ ಸಮಾಜವಾದದತ್ತ ವಿಶೇಷ ಆಸಕ್ತಿ ಇತ್ತು. ಲೋಹಿಯಾರ ಸಮಾಜವಾದ ಪ್ರಭಾವಿತರಾಗಿದ್ದ ಪಿ.ಲಂಕೇಶ್ ರು ರಾಜಕೀಯ ಪ್ರವೇಶಿಸುವ ಬಯಕೆಯಿಂದ ‘ಪ್ರಗತಿ ರಂಗ’ ಆರಂಭಿಸಿದ್ದವರು. ’ಕೆರೆಯ ನೀರನು ಕೆರೆಗೆ ಚೆಲ್ಲಿ’, ‘ನಾನಲ್ಲ’, ‘ಉಮಾಪತಿಯ ಸ್ಕಾಲರ್ ಷಿಪ್ ಯಾತ್ರೆ’, ‘ಕಲ್ಲು ಕರಗುವ ಸಮಯ’, ’ಉಲ್ಲಂಘನೆ’, ’ಮಂಜು ಕವಿದ ಸಂಜೆ’ ಪಿ.ಲಂಕೇಶರ ಪ್ರಕಟಿತ ಕಥಾ ಸಂಕಲನಗಳು. ‘ವಾಮನ’ ಪಿ.ಲಂಕೇಶ್ ರ ಮೊದಲ ಕಥೆ. ವಾಮನದಿಂದಲೇ ವಿಮರ್ಶಕರ ಗಮನ ಸೆಳೆದರು ಪಿ.ಲಂಕೇಶ್. ಅವರ ಮತ್ತೊಂದು ಮಹತ್ವದ ಕಥೆ ‘ರೊಟ್ಟಿ’. ಇದೂ ಕೂಡ ಎಲ್ಲ ಸಾಹಿತ್ಯಾಭಿಸಿಗಳ ಆಕರ್ಷಕವಾಗಿತು. ‘ಬಿಚ್ಚು’, ‘ತಲೆಮಾರು’, ಪಿ.ಲಂಕೇಶ್ ರ ಕವನ ಸಂಕಲನಗಳು, ಗದ್ಯದ ವಿಚಿತ್ರ ಸೊಗಸನ್ನು ಪದ್ಯಗಳಿಗೆ ತೊಡಿಸಿ ಕಾವ್ಯ ಬರೆದ ಪಿ.ಲಂಕೇಶ್ ರ ‘ಅವ್ವ-1’, ‘ಅವ್ವ-2’, ‘ದೇಶಭಕ್ತ ಸೂಳೆಮಗನ ಗದ್ಯಗೀತೆ’ ಅತ್ಯುತ್ತಮ ಕವನಗಳು. ನವ್ಯಕಾವ್ಯದ ಪ್ರಾತಿನಿಧಿಕ ಸಂಕಲನ ‘ಅಕ್ಷರ ಹೊಸಕಾವ್ಯ’ವನ್ನು ಸಂಪಾದಿಸಿ ಪ್ರಕಟಿಸಿದ್ದವರು. ಫ್ರೆಂಚ್ ಕವಿ ಬೋದಿಲೇರನ್ ಕವಿತೆ ‘ಪಾಪದ ಹೂಗಳು’ ಲಂಕೇಶ್ ಅನುವಾದಿಸಿರುವ ಮಹತ್ವದ ಸಂಕಲನವಾಗಿದೆ ನಮಗೆಲ್ಲಾ. ‘ಟಿ. ಪ್ರಸನ್ನನ ಗೃಹಸ್ಥಾಶ್ರಮ’ ಲಂಕೇಶರ ಪ್ರಥಮ ನಾಟಕವಾಗಿದೆ. ‘ಏಳು ನಾಟಕ’, ‘ಸಂಕ್ರಾಂತಿ’, ‘ಗುಣಮುಖ’ ಪಿ.ಲಂಕೇಶ್ ರ ನಾಟಕ ಕೃತಿಗಳು. ‘ಈಡಿಪಸ್ ಮತ್ತು ಅಂತಿಗೊನೆ’ ಸಫೋಕ್ಷಿಸ್ ಮಹಾಕವಿಯ ಗ್ರೀಕ್ ನಾಟಕದ ಕನ್ನಡ ಅನುವಾದ ಪಿ.ಲಂಕೇಶ್ ರ ಬಹು ಪ್ರಸಿದ್ಧಿ ಪಡೆದಿವು. ಪಿ.ಲಂಕೇಶ್ ರು ರಂಗ ಪ್ರದರ್ಶನಕ್ಕಾಗಿ ‘ಪ್ರತಿಮಾ ನಾಟಕ ರಂಗ’ ಎಂಬ ನಾಟಕ ತಂಡ ಕಟ್ಟಿದ್ದವರು. ‘ಬಿರುಕು’, ‘ಮುಸ್ಸಂಜೆಯ ಕಥಾ ಪ್ರಸಂಗ’, ’ಅಕ್ಕ’ ಪಿ.ಲಂಕೇಶ್ ರ ಕಾದಂಬರಿಗಳು. ‘ಪ್ರಸ್ತುತ (ವಿಮರ್ಶೆ) ಹಾಗೂ ‘ಕಂಡದ್ದು ಕಂಡಹಾಗೆ’ ಲೇಖನಗಳ ಸಂಗ್ರಹ ಓದುಗರಿಗೆ ಬಹು ಆಕರ್ಷಕವಾದ ಬರಹಗಳು. ‘ಲಂಕೇಶ್ ಪತ್ರಿಕೆಯ ಸಂಪಾದಕೀಯ ‘ಟೀಕೆ-ಟಿಪ್ಪಣಿ’ಯಂತೂ ಬಹು ನಮಗಂತೂ ಬಹು ಉತ್ತೇಜನಕಾರಿಯಾದ ಬರಹಗಳು. ಹೀಗೆಯೇ ಇಂತಹ ಮೂರು ಸಂಪುಟಗಳು ಪ್ರಕಟ ಮಾಡಿದರು ಪಿ.ಲಂಕೇಶ್. ‘ಮರೆಯುವ ಮುನ್ನ’ದ ಐದು ಸಂಪುಟ, ’ಬಿಟ್ಟು ಹೋದ ಪುಟಗಳು’ ಮೂರು ಸಂಪುಟ ಪ್ರಕಟವಾಗಿವೆ. ‘ಪತ್ರಿಕೆ ಪ್ರಕಾಶನದ ಮೂಲಕ ಕನ್ನಡದ ಮಹತ್ವದ ಕೃತಿಗಳನ್ನೂ ಪಿ.ಲಂಕೇಶ್ ಪ್ರಕಟಿಸಿದ್ದಾರೆ. ಅದಕ್ಕೂ ಮುನ್ನ ‘ತರುಣ ಲೇಖಕರ ಪ್ರಕಾಶನ’ದಲ್ಲಿ ಮಿತ್ರರ ಅನೇಕ ಕೃತಿಗಳನ್ನೂ ಪ್ರಕಟಿಸಿದ್ದವರು ಪಿ.ಲಂಕೇಶ್ ಅವರು. ಇದಲ್ಲದೇ ಪಿ.ಲಂಕೇಶ್ ಅವರು ಚಲನಚಿತ್ರ ರಂಗದಲ್ಲೂ ಗಮನೀಯ ಸಾಧನೆ ಮಾಡಿದವರು. ‘ಸಂಸ್ಕಾರ’ ಚಿತ್ರದಲ್ಲಿ ನಾರಾಯಣಪ್ಪನ ಪಾತ್ರ ವಹಿಸಿದ್ದ ಅವರು ‘ಪಲ್ಲವಿ’ ಚಿತ್ರದ ಅತ್ಯುತ್ತಮ ನಿರ್ದೇಶನಕ್ಕಾಗಿ ರಾಷ್ಟ್ರಪ್ರಶಸ್ತಿ(1977) ಪಡೆದಿದ್ದವರು. ‘ಅನುರೂಪ’, ‘ಎಲ್ಲಿಂದಲೋ ಬಂದವರು’, ’ಖಂಡವಿದೆಕೊ ಮಾಂಸವಿದೆಕೊ’ ಅವರು ನಿರ್ದೇಶಿಸಿದ ಚಲನಚಿತ್ರಗಳು. ಕರ್ನಾಟಕ ಸಾಹಿತ್ಯ ಅಕಾಡೆಮಿ, ನಾಟಕ ಅಕಾಡೆಮಿಯ ಪ್ರಶಸ್ತಿ ಗೌರವಗಳ ಜೊತೆಗೆ ‘ಕಲ್ಲು ಕರಗುವ ಸಮಯ’ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳೂ ಸಂದಿವೆಯಾದರೂ ಪಿ.ಲಂಕೇಶ್ ರ ಬರಹಕ್ಕೆ ಸಲ್ಲಬೇಕಾದ ಗೌರವ ಸಂದಿಲ್ಲ ಎಂಬುದೇ ಅವರ ಬರಹ ಅಭಿಮಾನಿಗಳ ಸೋಜಿಗದ ವಿಷಯ. ಇಂತಹ ಪಿ.ಲಂಕೇಶ್ ಅವರು 2000ರ ಜನವರಿ 25 ರಂದು ಅಸುನೀಗಿದರು. ಈ ಪ್ರಸಂಗವೊಂದು ಬರಹಗಾರಿಕೆಯ ಓದುಗರಿಗೆ ತುಂಬಲಾರದ ನಷ್ಟವಾಯಿತು. ಇಂತಿಷ್ಟು ಪಿ.ಲಂಕೇಶ್ ಕುರಿತ ಬರಹ ಮತ್ತು ಬದುಕು… ********************************************** ಕೆ.ಶಿವು.ಲಕ್ಕಣ್ಣವರ
ಪಿ.ಲಂಕೇಶ್ ಎಂಬ ‘ಹುಳಿಮಾವಿನ ಮರ’..! Read Post »
ಬುಡಕಟ್ಟು ಜನಾಂಗದ ಬಗ್ಗೆ ಬೆಳಕು ಚೆಲ್ಲುವ ಲೇಖನ ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ ಆಶಾ ಸಿದ್ದಲಿಂಗಯ್ಯ ಕಾಡುಗೊಲ್ಲ ಬುಡಕಟ್ಟು ಜನಾಂಗವು ತುಮಕೂರು, ಮತ್ತು ಚಿತ್ರದುರ್ಗ,ಜಿಲ್ಲೆಯಲ್ಲಿ ಹೆಚ್ಚಾಗಿ ನೆಲೆಗೊಂಡಿದ್ದಾರೆ ಉಳಿದಂತೆ ದಾವಣಗೆರೆ, ಬಳ್ಳಾರಿ ಗಡಿಭಾಗ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ , ರಾಮನಗರ , ಮಂಡ್ಯ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವಿರಳವಾಗಿ ಕಾಣಸಿಗುತ್ತಾರೆ. ಒಟ್ಟಾರೆ ಕರ್ನಾಟಕದಲ್ಲಿ ಇವರ ಜನಸಂಖ್ಯೆ ಹತ್ತು ಲಕ್ಷ ಇದೆ. ಕಾಡುಗೊಲ್ಲರನ್ನು ಮುನ್ನೆಲೆಗೆ ತರಲು ಮತ್ತು ಸರ್ಕಾರ ಅವರನ್ನು ಗುರುತಿಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರಾದ ಸಿ. ಎಸ್ ದ್ವಾರಕನಾಥ ರವರು, ಚಲನಚಿತ್ರ ನಟರಾದ ಚೇತನ್ ಅಹಿಂಸಾರವರು, ಮತ್ತು ಕಾಡುಗೊಲ್ಲ ಆಸ್ಮಿತೆ ಹೋರಾಟ ಸಮಿತಿಯ ಅಧ್ಯಕ್ಷರಾದ ಜಿ.ಕೆ. ನಾಗಣ್ಣರವರು ಇನ್ನು ಅನೇಕರು ಹೋರಾಟ ಮಾಡಿದ್ದಾರೆ. ಅವರ ಹೋರಾಟದಿಂದಾಗಿ ಸರ್ಕಾರ ಕಾಡುಗೊಲ್ಲರನ್ನು ಪ್ರತ್ಯೇಕಿಸಿ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. . ಸಂಧರ್ಭದಲ್ಲಿ ಕಾಡುಗೊಲ್ಲ ಹೋರಟಗಾರರಲ್ಲಿ ಹಿರಿಯರಾದಂತಹ ದಿವಗಂತ ನಾಗಪ್ಪರವರನ್ನು ಸ್ಮರಿಸಬೇಕು. ಈಗಲೂ ಕೂಡ ಕಾಡುಗೊಲ್ಲರ ಹಟ್ಟಿಗೆ ಹೋದರೆ ಈ ರೀತಿಯ ಗುಡಿಸಲುಗಳನ್ನು ಕಣ್ಣಾರೆ ನೋಡಬಹುದು. ಒಂದು ಕಡೆ ಮೂಢನಂಬಿಕೆಯಾದರೂ ಬುಡಕಟ್ಟು ಜೀವನವನ್ನು ಉಳಿಸಿಕೊಂಡಿರುವ ಜನಾಂಗ. ಇವತ್ತಿಗೂ ಕಾಡುಗೊಲ್ಲ ಜನಾಂಗದವರು ಬಾಣಂತಿಯರನ್ನು ಈ ಗುಡಿಸಲಿನಲ್ಲಿ 2 ವರೆ ತಿಂಗಳು ಬಿಡುತ್ತಾರೆ ಇದು ಆಧುನಿಕ ನಾಗರೀಕ ಸಮಾಜಕ್ಕೆ ಮೂಡನಂಬಿಕೆಯಾಗಿ ಕಂಡರೂ ಬುಡಕಟ್ಟು ಸಮುದಾಯವೋಂದು ಆದಿಮಾನವನ ಅವಾಸಸ್ಥಾನವನ್ನು ನೆನಪಿಸಿಕೊಳ್ಳುವ ಸಾಂಕೇತಿಕವಾದ ಆಚರಣೆಯ ರೀತಿ ಕಾಣುತ್ತದೆ ಇಂತಹ ಅನಾದಿಕಾಲದ ಬುಡಕಟ್ಟು ಜೀವನವಿಧಾನವನ್ನು ಉಳಿಸಿಕೊಂಡು ಬರುತ್ತಿರುವ ಕರ್ನಾಟಕದ ಏಕೈಕ ಬುಡಕಟ್ಟು ಎಂದರೆ ಅದು ಕಾಡುಗೊಲ್ಲರು ಮಾತ್ರ ಇದು ಕೆಲವೊಮ್ಮೆ ತನ್ನನ್ನೇ ತಾನು ಶೋಷಣೆ ಮಾಡಿಕೊಳ್ಳುವ ಕ್ರಮವಾಗಿಯೂ ಕಾಣುತ್ತೆ. ಕಾಡುಗೊಲ್ಲರು ಅನಾದಿ ಕಾಲದಿಂದ ಪಾಲಿಸಿಕೊಂಡು ಬಂದಂತಹ ಧಾರ್ಮಿಕ ನಂಬಿಕೆಯನ್ನು ಗೌರವಿಸೋಣ. ಕಾಡುಗೊಲ್ಲರ ಆರಾಧ್ಯದೈವ ಜುಂಜಪ್ಪ, ಕಾಡುಗೊಲ್ಲರ ದೇವರ ಇಷ್ಟದ ಹೂವು ಸಾದ ಪುಷ್ಪ, ನಮ್ಮ ಬುಡಕಟ್ಟು ದೇವರುಗಳನ್ನು ಮುನ್ನೆಲೆಗೆ ತರೋಣ. ಗುಡಸಲಿನಲ್ಲಿ ಕಾಡಿನಲ್ಲಿ ಜನ್ಮ ತಳೆಯುವ ಕಾಡುಗೊಲ್ಲರ ಮಕ್ಕಳು ಕಷ್ಟ ಸಹಿಷ್ಣುತೆ ಹೊಂದಿರುತ್ತಾರೆ ಪ್ರಕೃತಿಯೊಂದಿಗೆ ನಿಕಟ ಸಂಪರ್ಕ ಹೊಂದಿರುತ್ತಾರೆ.ಕಷ್ಟವನ್ನು ಎದುರಿಸುವ ಅವರ ಗುಣ ಅವರ ಪ್ರಬುದ್ಧತೆಯನ್ನು ತೋರುತ್ತದೆ. ಬ್ರಾಹ್ಮಣ್ಯವನ್ನು ಮರುಪ್ರಶ್ನೆ ಮಾಡದೇ ಪಾಲಿಸುವ ಜನರು ಬುಡಕಟ್ಟು ಜನಾಂಗದ ಧಾರ್ಮಿಕ ಭಾವನೆಗಳ ನಂಬಿಕೆಯನ್ನು ಪ್ರಶ್ನಿಸುತ್ತಾರೆ. ಬುಡಕಟ್ಟು ಜನಾಂಗದ ಬಗ್ಗೆ ಅನ್ವೇಷಣೆ ಮಾಡುತ್ತ ಹೊದಂತೆ ಕಾಡಿನೊಂದಿಗೆ ಅವರ ಒಡನಾಟ ಪ್ರಕೃತಿಯೊಂದಗಿನ ಅವಿನಾಭಾವ ಸಂಬಂಧವನ್ನು ಪರಿಚಯಿಸುತ್ತದೆ. ಆಧುನಿಕ ಸಮಾಜದ ಜೀವನದ ಜಂಜಾಟದಲ್ಲಿ ನಾಲ್ಕು ಜನ ಏನಾನ್ನುತ್ತಾರೊ ಎಂಬ ಭಯದಲ್ಲಿ ಜನರನ್ನ ಮೆಚ್ಚಿಸುವ ಬಗ್ಗೆಯೇ ಯೋಚಿಸುತ್ತಾ ಜೀವನ ಸವೆಸುವ ಅದೆಷ್ಟೋ ಮಧ್ಯಮ ವರ್ಗದ ಜನ ನಮ್ಮ ನಡುವೆ ಇದ್ದಾರೆ. ಇದನ್ನೆಲ್ಲಾ ನೋಡಿದಾಗ ಬುಡಕಟ್ಟು ಜೀವನ ಶೈಲಿ, ಒತ್ತಡವಿಲ್ಲದ, ಪ್ರಕೃತಿ ಪರವಾದ ಜೀವನ ಪ್ರತಿಯೊಬ್ಬರಿಗೂ ಆದರ್ಶಮಯ. ಮನೆಗಳು ಮಾನವನು ನೆಲೆಸಲು ಉಪಯೋಗಿಸುವ ಕಟ್ಟಡ. ಸಾಮಾನ್ಯವಾಗಿ ಸುತ್ತಲೂ ಗೋಡೆಗಳು ಮತ್ತು ಮೇಲೊಂದು ಸೂರನ್ನು ಹೊಂದಿದ್ದು, ಪ್ರತಿಕೂಲ ವಾತಾವರಣಗಳಿಂದ ತಮ್ಮ ಒಳಗಿರುವವರನ್ನು ರಕ್ಷಿಸುತ್ತವೆ. ಒಂದು ಮನೆಯಲ್ಲಿರುವ ಸಾಮಾಜಿಕ ಘಟಕವನ್ನು ಮನೆಜನ ಎಂದು ಕರೆಯಲಾಗುತ್ತದೆ. ಮಾನವ ತಾತ್ಕಾಲಿಕವಾಗಿ ಇಲ್ಲವೇ ಶಾಶ್ವತವಾಗಿ ವಾಸಿಸಲು ಬಳಸುವ ನೈಸರ್ಗಿಕವಾದ ತಾಣ ಅಥವಾ ತಾನೇ ರಚಿಸಿದ ಆಸರೆ. ಮಾನವ ನಾಗರಿಕತೆಯ ವಿಕಾಸದೊಂದಿಗೆ ಗೃಹದ ವಿಕಾಸ ನಿಕಟವಾಗಿ ಹೆಣೆದುಕೊಂಡಿದೆ. ಮರದ ಪೊಟರೆ, ಕಲ್ಲುಬಂಡೆಗಳ ಸಂದು, ಗುಹೆಗಳಿಂದ ತೊಡಗಿ ಆಧುನಿಕ ಗಗನಚುಂಬಿ ಗೃಹಗಳ ವರೆಗಿನ ಇದರ ಬೆಳೆವಣಿಗೆ ಮಾನವ ಸಮಾಜದ ವಿಕಾಸದ ಒಂದು ಮುಖ. ತನಗಾಗಿ ತನ್ನವರಿಗಾಗಿ ವಾಸಸ್ಥಳವೊಂದನ್ನು ರಚಿಸಿಕೊಳ್ಳಬೇಕೆಂಬ ಕಲ್ಪನೆ ಮಾನವನಿಗೆ ಬಂದುದೇ ಸು.11000 ವರ್ಷಗಳ ಹಿಂದೆ, ಪ್ರ.ಶ.ಪು. ಸು. 9000 ಸುಮಾರಿಗೆ ಎನ್ನಬಹುದು. ಅದಕ್ಕೂ ಹಿಂದೆ ಆತ ತನ್ನ ಸುತ್ತಲಿನ ಪ್ರಾಕೃತಿಕ ಸನ್ನಿವೇಶಗಳನ್ನು ಅವಲಂಬಿಸಿದ್ದ. ಆಹಾರಕ್ಕಾಗಿ ಹಣ್ಣುಹಂಪಲುಗಳನ್ನು-ಅವು ಬೆಳೆದಷ್ಟು ಕಾಲ, ಪ್ರಾಯಶಃ ವರ್ಷದಲ್ಲಿ ಒಂದೆರಡು ತಿಂಗಳು-ತಿನ್ನುತ್ತಿದ್ದ. ಉಳಿದ ವೇಳೆಯಲ್ಲಿ ಸುತ್ತಲಿನಪ್ರಾಣಿಗಳೇ ಇವನ ಆಹಾರ. ಸ್ವಂತ ಜೀವಕ್ಕೆ ಅವುಗಳಿಂದ ಅಪಾಯ ಒದಗದಂತೆ ರಕ್ಷಣೆ ಪಡೆಯಲು ಮಾನವ ಮರದ ಪೊಟರೆಗಳಲ್ಲೋ ಬಂಡೆಗಳ ಸಂದುಗಳಲ್ಲೋ ರಾತ್ರಿಗಳನ್ನು ಕಳೆಯುತ್ತಿದ್ದ. ಸ್ವಾಭಾವಿಕವಾಗಿ ಗುಹೆಗಳೂ ಇವನ ತಂಗುದಾಣಗಳಾದುವು. ಆಹಾರಕ್ಕಾಗಿ ಅಲೆಮಾರಿಜೀವನವನ್ನು ಅವಲಂಬಿಸಿದ ಇವನಿಗೆ ಶಾಶ್ವತವಾದ ನೆಲೆಯ ಆವಶ್ಯಕತೆಯಿರಲಿಲ್ಲ. ಕ್ರಮೇಣ ಇವನ ಜೀವನಕ್ರಮದಲ್ಲಿ ಸುಧಾರಣೆಗಳಾದುವು. ಆಹಾರವನ್ನು ಹುಡುಕುವ ಶ್ರಮಕ್ಕೆ ಬದಲಾಗಿ ಆಹಾರವನ್ನು ತಾನೇ ಬೆಳೆಯುವ ವಿಧಾನವನ್ನು ಅರಿತುಕೊಂಡ. ಈ ಘಟನೆ ಮಾನವನ ಇತಿಹಾಸದಲ್ಲಿ ಅತಿ ಪ್ರಮುಖವಾದದ್ದು. ಅಂದಿನಿಂದ ಇವನು ಅಲೆಮಾರಿಜೀವನವನ್ನು ಮುಕ್ತಾಯಗೊಳಿಸಿ ಒಂದು ಕಡೆ ಸ್ಥಿರವಾಗಿ ನೆಲೆಸುವುದನ್ನು ಕಲಿತ. ತನ್ನೊಡನಿದ್ದ ಜನರೊಡನೆ ಗುಂಪುಗೂಡಿ ವಾಸಿಸಲಾರಂಭಿಸಿದ್ದು ಈ ಅವಧಿಯಲ್ಲಿ. ಕ್ರಮೇಣ ತಾನು, ತನ್ನದು ಎಂಬ ಮನೋಭಾವ ಬೆಳೆದು ಕುಟುಂಬ ಪದ್ಧತಿ ಆರಂಭವಾಯಿತು. ಕುಟುಂಬದವರೆಲ್ಲ ಒಂದು ಕಡೆ ಇರಬೇಕೆನಿಸಿದ್ದಾಗಲೇ ಏಕಾಂತತೆಯ ಆವಶ್ಯಕತೆಯೂ ಉಂಟಾಯಿತು. ಅದಕ್ಕಾಗಿ ಮನೆಯ ರಚನೆ ತಲೆದೋರಿತು. ಈ ಮನೆಗಳು ಕೇವಲ ಪ್ರಾರಂಭಿಕ ಸ್ಥಿತಿಯ ಗುಡಿಸಲುಗಳು ಮಾತ್ರ. ನೀಲಗಿರಿ ಬೆಟ್ಟಗಳಲ್ಲಿನ ತೋಡ ಜನಾಂಗದವರ ಗುಡಿಸಲಿನಂತೆಯೇ ಕಾಡುಗೊಲ್ಲರ ಗುಡಿಸಲು ಇದೆ. ಈಗಲೂ ಇದೇ ರೀತಿಯ ಗುಡಿಸಲುಗಳನ್ನು ನಾವು ನಮ್ಮ ಕಾಡುಗೊಲ್ಲ ಜನಾಂಗದ ಗುಡಿಸಲಿನಲ್ಲಿಯೂ ಕಾಣಬಹುದು. ಆದಿವಾಸಿತಾಣಗಳು ಪ್ರವಾಸತಾಣಗಳಾಗಲಿ. ಆ ಮೂಲಕ ಬುಡಕಟ್ಟು ಜನಾಂಗ ಮುನ್ನೆಲೆಗೆ ಬರಲಿ,ಅವರ ಅಭಿವೃದ್ಧಿ ಬಗ್ಗೆ ಸರಕಾರ ಗಮನ ಹರಿಸಲಿ. ************************************************
ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ Read Post »
ಲಲಿತ ಪ್ರಬಂಧ ಎಲೆಗಳ ಬಲೆಯಲ್ಲಿ… ಟಿ.ಎಸ್.ಶ್ರವಣಕುಮಾರಿ ಈ ಹದಿಮೂರು ಎಲೆಗಳಿಗೊಂದು ವಿಶಿಷ್ಟ ಆಕರ್ಷಣೆಯಿದೆ, ಸೆಳೆತವಿದೆ. ಕೆಲವರು ರಮ್ಮಿ, ಬ್ರಿಡ್ಜ್, ಮೂರೆಲೆ ಎನ್ನುತ್ತಾ ಇಸ್ಪೀಟಿನ ಹಿಂದೆ ಬಿದ್ದರೆ, ಇನ್ನು ಕೆಲವರು ಸಾಲಿಟೇರ್, ಫ್ರೀಸೆಲ್ ಎನ್ನುತ್ತಾ ಕಂಪ್ಯೂಟರಿನಲ್ಲಿ ಅದೇ ಹದಿಮೂರು ಎಲೆಗಳಲ್ಲಿ ಅಡಗಿಕೊಂಡಿರುತ್ತಾರೆ. ʻಅಂದರ್ ಬಾಹರ್ ಅಂದರ್ ಬಾಹರ್ʼ ಎಂದು ಕೋರಸ್ನಲ್ಲಿ ಗುನುಗುತ್ತ ʻಎಕ್ಕ ರಾಜ ರಾಣಿ ನನ್ನ ಕೈಯೊಳಗೆ, ಹಿಡಿಮಣ್ಣು ನಿನ್ನ ಬಾಯೊಳಗೆʼ ಎಂದು ಹಾಡುತ್ತ ಜಾಕಿ ಚಲನಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ತನ್ನೆಲ್ಲಾ ಅಭಿಮಾನಿಗಳನ್ನೂ ವಶೀಕರಣ ಮಾಡಿಕೊಂಡಿದ್ದು ಸುಳ್ಳಲ್ಲ. ಅದೇನೋ ಚಲನಚಿತ್ರ… ಅವನು ಗೆದ್ದರೂ, ಸೋತರೂ ಅವನ ಮಡಿಲಲ್ಲಿ ಲಕ್ಷ್ಮಿ ಬಂದು ಕೂರುತ್ತಾಳೆ; ಆದರೆ ಅವನಂತೆ ಆಡಹೊರಟ ಜನಸಾಮಾನ್ಯರ ಬಳಿ ಅವಳು ಸಿಕ್ಕಂತೆ ಮಾಡಿ ತಪ್ಪಿಸಿಕೊಳ್ಳುವುದೇ ಹೆಚ್ಚು. ಅವಳು ಸಿಕ್ಕಿಕೊಳ್ಳುತ್ತಾಳೋ ಇಲ್ಲವೋ ತಿಳಿಯದು, ಆಡುವವರಂತೂ ಈ ಎಕ್ಕ, ರಾಜ, ರಾಣಿ, ಜೋಕರ್ ಎಂಬ ರಂಭೆ, ಊರ್ವಶಿ, ಮೇನಕೆ, ತಿಲೋತ್ತಮೆಯರ ಬಲೆಯಲ್ಲಿ ಬಿದ್ದು ತಮ್ಮನ್ನೇ ಸಂತೋಷದಿಂದ, ಸ್ವಾನುರಾಗದಿಂದ ಅರ್ಪಣೆ ಮಾಡಿಕೊಂಡಿರುತ್ತಾರೆ. ಇಸ್ಪೀಟಾಟಕ್ಕೆ ಕಾರಣಗಳು ಹಲವಾರು. ಹೊತ್ತು ಕಳೆಯುವುದಕ್ಕಾಗಿ ಎಂದು ಶುರುವಾಗುವ ನರ್ತನ ಹಲವು ಭಾವಭಂಗಿಗಳನ್ನು ತೋರುತ್ತಾ ಆಡುಗರನ್ನು ತನ್ನೆಡೆಗೆ ಸೆಳೆಯುತ್ತದೆ. ಬೇಸರ ನೀಗಲು… ಗೆದ್ದ ಖುಷಿಯ ಅಮಲು… ಸೋತು ಕಳೆದದ್ದನ್ನು ಕಳೆದಲ್ಲೇ ಛಲದಿಂದ ಮರಳಿ ಹುಡುಕಲು… ಗೆಳೆಯರು ಸಿಕ್ಕ ಖುಷಿಯಲ್ಲಿ… ಆಟದ ಆಕರ್ಷಣೆಯಲ್ಲಿ… ಹೀಗೆ ಹಲವು ವಿನ್ಯಾಸಗಳಲ್ಲಿ ಇಸ್ಪೀಟಿನ ರಾಣಿ ತನ್ನ ರಸಿಕರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ತವಕಿಸುತ್ತಿರುತ್ತಾಳೆ. ಒಮ್ಮೆ ಇವಳ ಮೋಹದಲ್ಲಿ ಸಿಲುಕಿಕೊಂಡವರಿಗೆ ಬುದ್ದಿಯ ಅಂಕುಶವಿಲ್ಲದಿದ್ದರೆ ಅದರಿಂದ ಮುಕ್ತಿಯಿಲ್ಲ. ಅದೆಷ್ಟೋ ಮಂದಿ ಮನೆ, ಮಠ, ಹೆಂಡತಿ-ಮಕ್ಕಳು, ಬಂಧು-ಬಾಂದವರನ್ನು ಕಳೆದುಕೊಂಡು ಬೀದಿ ಪಾಲಾಗಿರುವವರನ್ನು ನಮ್ಮ ಹತ್ತಿರದ ಸ್ನೇಹ ವಲಯದಲ್ಲೇ, ನೆಂಟರಿಷ್ಟರಲ್ಲೇ ಕಂಡಿದ್ದೇನೆ. ʻಊರಿಗೊಂದು ಹೊಲಗೇರಿʼ ಎನ್ನುವ ಗಾದೆಗಿಂತ ʻಊರಿಗೊಂದಾದರೂ ಇಸ್ಪೀಟಿನ ಅಡ್ಡಾʼ ಎನ್ನುವ ಮಾತೇ ಹೆಚ್ಚು ಸಮಂಜಸವೆನಿಸುತ್ತದೆ. ದೊಡ್ಡ ಪಟ್ಟಣಗಳಲ್ಲಾದರೆ ಇಸ್ಪೀಟು ಕ್ಲಬ್ಬು. ಇದರ ಪರಾಕಾಷ್ಠೆಯನ್ನು ನಾನು ನೋಡಿದ್ದು ಅಮೇರಿಕಾದ ಲಾಸ್ ವೇಗಾಸ್ನ ಕ್ಯಾಸಿನೋಗಳಲ್ಲಿ. ಅಲ್ಲಿನ ಜೂಜಿನ ಅಡ್ಡಾಗಳಲ್ಲಿ ಬೈಗು ಬೆಳಗೆನ್ನದೆ ಮಂದಿ ತಮ್ಮ ಮುಂದಿನ ಪರದೆಯಲ್ಲಿ ಮುಳುಗಿಹೋಗಿರುತ್ತಾರೆ, ಕಳೆದು ಹೋಗಿರುತ್ತಾರೆ!! ನನ್ನ ಈ ಲೇಖನದ ಉದ್ದೇಶ ಮನೆಮಠ ಕಳೆದುಕೊಂಡವರ ಕರುಣಾಜನಕ ಕತೆಗಳನ್ನು ಹೇಳುವುದಂತೂ ಖಂಡಿತವಾಗಿಯೂ ಅಲ್ಲ. ಒಂದು ಕಾಲದಲ್ಲಿ ಇದು ಬಂಧುಬಳಗದ ನಡುವಿನ ಸೇತುವಾಗಿ ಜನಗಳನ್ನು ಹಿಡಿದಿಡುತ್ತಿದ್ದ ಆಕರ್ಷಣೆಯ ಸಾಧನವಾಗಿದ್ದುದರ ಬಗ್ಗೆ ಕೆಲವು ಪ್ರಸಂಗಗಳನ್ನು ಹೇಳಬೇಕೆಂದಷ್ಟೆ. ಒಂದು ಕಾಲ ಎಂದರೆ ಎಲ್ಲೋ ಹೋಗಿಬಿಡಬೇಡಿ. ನಾನು ಹುಟ್ಟುವುದಕ್ಕೂ ಮುಂಚೆಯೇ ಇತ್ತೋ…? ನನಗೆ ತಿಳಿಯದು. ಅಂತೂ ಒಂದೈವತ್ತು, ಅರವತ್ತು ವರ್ಷಗಳ ಹಿಂದೆ ಎಂದುಕೊಂಡರೆ ಸಾಕು. ಮದುವೆಮನೆಯಲ್ಲಿ ಸೇರುತ್ತಿದ್ದ ನೆಂಟರಿಷ್ಟರು, ಬಂಧು ಬಳಗ ಸೇರಿರುವ ಖುಷಿಗೆ, ದಿಬ್ಬಣ ಮದುವೆ ಮನೆಗೆ ಕಾಲಿಟ್ಟ ಅನತಿಕಾಲದಲ್ಲೇ ತಮಗೊಂದು ಸೂಕ್ತವಾದ ಹೆಚ್ಚಾಗಿ ಯಾರ ಗಮನಕ್ಕೂ ಬಾರದಂತ (ಕಾಫಿ, ಕುರುಕಲು ತಿಂಡಿಗಳ ಪೂರೈಕೆಗೆ ಅನುವಾಗಿರುವಂತ) ಕೋಣೆಯನ್ನು ಆಕ್ರಮಿಸಿಕೊಂಡು ಜಮಖಾನೆ ಹಾಸಿಕೊಂಡು ಇಸ್ಪೀಟಿನ ಕಟ್ಟನ್ನು ಬಿಚ್ಚಿದರೆಂದರೆ, ಗಂಡಿನ ಕಡೆಯವರು, ಹೆಣ್ಣಿನ ಕಡೆಯವರು ಎಂಬ ಭೇದಭಾವವಿಲ್ಲದೆ ಆಟ ಅವಿಶ್ರಾಂತವಾಗಿ ಮುಂದುವರೆದಿರುತ್ತಿತ್ತು. ಅವರ ಭಕ್ತಿ ಪರವಶತೆಯನ್ನು ಕೆಡಿಸಲು ನಿದ್ರಾದೇವಿಯಿಂದಲೂ ಸಾಧ್ಯವಿರಲಿಲ್ಲ ಬಿಡಿ! ಇಂತಲ್ಲಿ ದುಡ್ಡಿನ ಮೊತ್ತ ಹೆಚ್ಚಲ್ಲ. ಆಟವನ್ನು ರಂಗೇರಿಸಲು ಬೇಕಾದಷ್ಟು ಮಾತ್ರ… ಗೆದ್ದರೆ ಹತ್ತು… ಸೋತರೆ ಹತ್ತು… ಎನ್ನುವ ಹಾಗೆ… ಒಡವೆ, ವಸ್ತು, ಮನೆ ಮಠಗಳನ್ನು ಒತ್ತೆ ಇಡುವಂತ ಅಮಲಲ್ಲ. ಖುಷಿಗಾಗಿ ಖುಷಿ.. ಮೋಜಿಗಾಗಿ ಮೋಜು. ಇಸ್ಪೀಟೊಂದು ಖಯಾಲಿಯಷ್ಟೇ. ನನ್ನೊಬ್ಬ ದೊಡ್ಡಮ್ಮನ ಮಗನ ಮದುವೆಯಲ್ಲಿ ಹಿರಿಯಾಕೆಯೊಬ್ಬರು ಮದುವೆ ಹುಡುಗನ ಅಕ್ಕನನ್ನು “ಏನೇ ವಿಜ್ಜಮ್ಮ ನಿನ್ನ ಯಜಮಾನರು ಕಾಣುತ್ತಿಲ್ಲ, ತೀರ ಮೈದುನನ ಮದುವೆಗೂ ಬರಲಿಲ್ಲವೇ?” ಎಂದಿದ್ದರು. “ಅಯ್ಯೋ ಬಂದಿದ್ದಾರೆ ಚಿಕ್ಕಮ್ಮ, ಭಜನೆಯಲ್ಲಿ ಮುಳುಗಿಹೋಗಿದಾರೆ ಅಷ್ಟೇ” ಎಂದಳು ವಿಜಯ. ಮಹಾ ಭಕ್ತಳಾದ ಆಕೆ “ಅಯ್ಯೋ ಯಾವಾಗಿಂದ ನಡೀತಿದ್ಯೆ. ಎಲ್ಲಿ? ನಂಗೊತ್ತಾಗ್ಲಿಲ್ವೆ… ಅದೆಲ್ಲಿ ತೋರ್ಸು ಬಾರೆ ಸ್ವಲ್ಪ” ಎನ್ನುತ್ತಾ ಅವಳ ದುಂಬಾಲು ಬಿದ್ದರು. “ಅದು ನೀವು ಮಾಡೋ ಭಜನೆ ಅಲ್ಲ ಬಿಡಿ” ಎನ್ನುತ್ತಾ ಯಾರೋ ಕರೆದರೆಂದು ಅಲ್ಲಿಂದ ಜಾರಿಕೊಂಡಿದ್ದಳು. ಆಕೆ ಬಿಟ್ಟಾರೆಯೇ ಕಂಡಕಂಡವರನ್ನೆಲ್ಲಾ “ಭಜನೆ ನಡೀರಿರೋದು ಎಲ್ಲಿ?” ಎಂದು ತಲೆ ತಿಂದಾಗ ಯಾರೋ ಪುಣ್ಯಾತ್ಮರು ನಡೆಯುತ್ತಿದ್ದ ಕೋಣೆಯ ಬಾಗಿಲಿಗೆ ಕರೆದೊಯ್ದು ತೋರಿಸಿದರು. “ಅಯ್ಯೋ.. ಈ ಅನಿಷ್ಟಾನ ವಿಜ್ಜು ಭಜನೆ ಅಂದಳಲ್ಲಾ” ಎಂದು ಮಮ್ಮಲ ಮರುಗಿದರು. ನನ್ನ ಮದುವೆಯ ನಿಷ್ಕರ್ಷೆಯಾಗುವಾಗ ನಮ್ಮ ಮಾವನವರು “ನಮ್ಮದು ಒಂದು ಬೇಡಿಕೆ ಇದೆ” ಎಂದಿದ್ದರು. ʻಇದುವರೆಗೂ ಏನನ್ನೂ ಕೇಳದವರು ಈಗ ಏನೋ ಬೇಡಿಕೆ ಇಡುತ್ತಿದ್ದಾರಲ್ಲʼ ಎನ್ನುವ ಪ್ರಶ್ನೆಯನ್ನು ನಮ್ಮ ತಾಯಿ, ತಂದೆಯರ ಮುಖದಲ್ಲಿ ನೋಡಿದವರೇ “ಇನ್ನೇನಿಲ್ಲ; ನಮ್ಮ ಕಡೆ ಬರುವ ನೆಂಟರಿಷ್ಟರಲ್ಲಿ ಕೆಲವರಿಗೆ ಇಸ್ಪೀಟಿನ ಖಯಾಲಿ. ರಾತ್ರಿ ಹಗಲು ಅನ್ನದೆ ಮದುವೆ ಮನೆಯಲ್ಲಿ ಇದ್ದಷ್ಟು ಹೊತ್ತೂ ಆಡುತ್ತಿರುತ್ತಾರೆ. ಆಗಾಗ ಅವರಿಗೆ ಕಾಫಿಯೊಂದನ್ನು ಕೊಟ್ಟರೆ ಸಾಕು. ಅವರು ಊಟ, ತಿಂಡೀನೂ ಕೇಳಲ್ಲ” ಎಂದು ದುಗುಡಗೊಂಡಿದ್ದವರ ಮುಖಗಳಲ್ಲಿ ನಗೆಯರಳಿಸಿದ್ದರು. ಅವರು ಹೇಳಿದ್ದರಲ್ಲಿ ಅತಿಶಯೋಕ್ತಿಯೇನಿರಲಿಲ್ಲ ಬಿಡಿ; ಹುಷಾರು ತಪ್ಪಿದ್ದ ಎಂಟು ತಿಂಗಳ ಮಗುವನ್ನು ಡಾಕ್ಟರ ಬಳಿಗೆ ಕರೆದೊಯ್ಯಲು ನನ್ನ ವಾರಗಿತ್ತಿ, ಆಟದಲ್ಲೇ ಮುಳುಗಿಹೋಗಿದ್ದ ಭಾವನನ್ನು ಆಡುತ್ತಿರುವಲ್ಲಿಗೇ ಹೋಗಿ ಎಬ್ಬಿಸಿ ಕರೆದುಕೊಂಡು (ಎಳೆದುಕೊಂಡು?) ಬರಬೇಕಾಯಿತು! ಮದುವೆ ಮುಗಿಸಿಕೊಂಡು ಹಿಂತಿರುಗುವ ಮುನ್ನ (ಯಾವ ಹೊತ್ತಿಗೆ ಯಾವ ಭಕ್ಷ್ಯ ಬಡಿಸಿದ್ದರೆಂದು ಅವರು ಗಮನಿಸಿದ್ದರೋ ಇಲ್ಲವೋ) ಅವರ ಆಟವು ಸಾಂಗವಾಗಿ ನಡೆಯಲು ಸಹಕರಿಸಿ ನಿಯತವಾಗಿ ಕಾಫಿತಿಂಡಿಗಳನ್ನು ಪೂರೈಸಿದವರೆಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿ ತೃಪ್ತರಾಗಿ ಹೊರಟರು. ಇನ್ನು ನನ್ನ ನಾದಿನಿಯ ಮದುವೆಯಲ್ಲಿ ಬೀಗರೌತಣವಾದ ತಕ್ಷಣ ನಾವು ಛತ್ರವನ್ನು ಬಿಟ್ಟುಕೊಡಬೇಕಿತ್ತು. ಸಂಜೆ ಅಲ್ಲಿ ಇನ್ನೊಂದು ಕಡೆಯವರ ಆರತಕ್ಷತೆ ನಡೆಯುವುದಿತ್ತು. ಹಾಗಾಗಿ ನಾವು ಬೆಳಗಿನಿಂದಲೇ ಸಾಧ್ಯವಾದಷ್ಟು ನಮ್ಮ ಸಾಮಾನು ಸರಂಜಾಮುಗಳನ್ನು ಸಾಗಿಸುತ್ತಾ ನಾವು ಹೊರಡುವಾಗ ತೆಗೆದುಕೊಂಡು ಹೋಗಬಹುದಾದಷ್ಟನ್ನು ಮಾತ್ರ ಉಳಿಸಿಕೊಂಡಿದ್ದೆವು. ಊಟವಾದ ತಕ್ಷಣ ಪರಸ್ಪರ ಬೀಳ್ಕೊಂಡು ಅಲ್ಲಿಂದ ಗಂಡು ಹೆಣ್ಣು ಇಬ್ಬರ ಕಡೆಯವರೂ ಹೊರಟರೂ ಇನ್ನೂ ಇಸ್ಪೀಟಿನಾಟ ಮುಗಿದಿರಲಿಲ್ಲ. ಛತ್ರದವರು ಜಮಖಾನೆಯನ್ನೂ ವಶಕ್ಕೆ ತೆಗೆದುಕೊಂಡ ಮೇಲೂ ನೆಲದ ಮೇಲೇ ಇನ್ನೊಂದಿಷ್ಟು ಕಾಲ ಆಟವನ್ನು ಮುಂದುವರೆಸುತ್ತಿದ್ದವರು ಸಂಜೆಯ ಕಾರ್ಯಕ್ರಮದವರು ತಮ್ಮ ಸರಕುಗಳನ್ನೆಲ್ಲಾ ತೆಗೆದುಕೊಂಡು ಬಂದು ಎಬ್ಬಿಸಿದಾಗ, ನಮ್ಮ ಕಡೆಯವರೆಲ್ಲರೂ ಛತ್ರ ಬಿಟ್ಟು ಬಹಳ ಸಮಯವಾಗಿದೆಯೆನ್ನುವುದನ್ನು ಮನಗಂಡು ಮನಸ್ಸಿಲ್ಲದ ಮನಸ್ಸಿನಿಂದ ಎದ್ದರಂತೆ! ಹಾಗೆ ಎಬ್ಬಿಸದೇ ʻಏನೋ ಪಾಪ ಆಡಿಕೊಂಡಿರಲಿʼ ಎಂದು ಬಿಟ್ಟಿದ್ದರೆ, ಆ ಮದುವೆ ಮುಗಿದದ್ದೂ ಗೊತ್ತಾಗುತ್ತಿರಲಿಲ್ಲ ಎನ್ನುವುದು ನನ್ನ ಪ್ರಾಮಾಣಿಕ ಅನಿಸಿಕೆ! ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದ ಡಾ|| ಡಿ. ಶಂಕರನಾರಾಯಣ್ ಅವರು ನನ್ನ ಅತ್ತೆಯ ಸ್ವಂತ ತಮ್ಮ, ನನ್ನ ಪತಿಗೆ ಸೋದರಮಾವ. ಅವರ ಓದುವ ಕಾಲದಲ್ಲಿ ನಮ್ಮ ಮಾವನವರು ಅವರಿಗೆ ತುಂಬಾ ಸಹಾಯ ಮಾಡಿದ್ದರಂತೆ. ದೆಹಲಿಯ ಯು.ಜಿ.ಸಿ.ಯಲ್ಲಿ ಕಾರ್ಯದರ್ಶಿಯಾಗಿದ್ದ ಕಾಲದಲ್ಲಿ ಅವರು ಬೆಂಗಳೂರಿಗೆ ಬಂದಾಗೆಲ್ಲಾ ಅವರ ಕಛೇರಿಯ ಕೆಲಸವು ಮುಗಿದ ನಂತರ ಒಂದಷ್ಟಾದರೂ ಸಮಯವನ್ನು ಇಲ್ಲಿದ್ದ ಬಂಧುಬಾಂಧವರೊಡನೆ ಇಸ್ಪೀಟಾಟದಲ್ಲಿ ಕಳೆದು ತೆರಳುತ್ತಿದ್ದರು. ಅವರ ವೇಳಾಪಟ್ಟಿ ಸಕ್ಕರೆಯ ಜಾಡು ಹಿಡಿಯುವ ಇರುವೆಯಂತೆ ಪ್ರಿಯ ಬಂಧುಗಳೆಲ್ಲರಿಗೂ ತಿಳಿದು ಒಟ್ಟಾಗಿ ಸೇರಿ ಇಸ್ಪೀಟಿನ ಕಟ್ಟಿಗೆ ಬಂಧ ವಿಮೋಚನೆ ಮಾಡಿ ಆನಂದ ಮಹೋತ್ಸವವನ್ನು ಆಚರಿಸುತ್ತಿದ್ದರು. ಅಂತೆಯೇ ಆ ಕಾಲದಲ್ಲಿ ನಮ್ಮ ಬಂಧು, ಬಳಗದಲ್ಲಿ ಯಾರು ದೆಹಲಿಗೆ ಹೋದರೂ ಅವರ ಮನೆಯಲ್ಲೇ ವಾರ(ತಿಂಗಳು)ಗಟ್ಟಲೆ ಉಳಿದುಕೊಂಡು ದೆಹಲಿಯ ಸುತ್ತಮುತ್ತಲನ್ನು ನೋಡಿಕೊಂಡು ಬರುತ್ತಿದ್ದರು. ಬೆಳಗ್ಗೆಯೆಲ್ಲಾ ಪ್ರೇಕ್ಷಣೀಯ ಸ್ಥಳಗಳ ದರ್ಶನ; ಸಂಜೆಯಾಯಿತೆಂದರೆ ಇಸ್ಪೀಟ್ ರಾಣಿಯ ನರ್ತನ! ನನ್ನ ಮಾವನವರು ತೀರಿಕೊಂಡಾಗ ಈ ಸೋದರಮಾವ ದೆಹಲಿಯಿಂದ ಗುಬ್ಬಿಗೆ ಬಂದಿದ್ದವರು, “ವಾಸಣ್ಣ ಸತ್ತ ಜಾಗದಲ್ಲಿ ನಾವು ನಿದ್ದೆ ಮಾಡಿದರೆ ಅವನ ಆತ್ಮಕ್ಕೆ ಶಾಂತಿ ಸಿಗೋದಿಲ್ಲ. ಹಾಗಾಗಿ ನಾವೆಲ್ಲರೂ ಕ್ರಿಯಾ ಕಲಾಪಗಳು ಮುಗಿದು ಈ ಕೋಣೆಗೆ ಬಾಗಿಲು ಹಾಕುವ ತನಕ (ಮಾವನವರು ಸತ್ತ ಘಳಿಗೆ ಕೆಟ್ಟ ನಕ್ಷತ್ರವಾದ್ದರಿಂದ ಐದು ತಿಂಗಳು ಬಾಗಿಲು ಹಾಕಬೇಕಿತ್ತು) ದುಃಖವನ್ನು ಮರೆತು, ದಣಿವರಿಯದೆ ಇಸ್ಪೀಟಾಡಿ, ತನ್ಮೂಲಕ ಗತಿಸಿದ ಹಿರಿಯರಿಗೆ ಗೌರವವನ್ನು ಕೊಡೋಣ” ಎನ್ನುವ ಠರಾವನ್ನು ಹೊರಡಿಸಿದರು. ಅಷ್ಟು ಹಿರಿಯರ ಬಾಯಿಂದ ಬಂದ ಅಂತಹ ಮುತ್ತಿನಂತ ಅದ್ಭುತ ಮಾತಿಗೆ ಎಂತಾದರೂ ಅಗೌರವವನ್ನು ಸೂಚಿಸಲಾದೀತೇ…?! ಸುಮಾರು ಮೂರ್ನಾಲ್ಕು ಚದುರಡಿಯಿರುವ ಆ ಕೋಣೆಯಲ್ಲಿ ಪಠಪಠಪಠಣ ಆರಂಭವಾಯಿತು. ನೆಂಟರು ಬಂದ ಹಾಗೆಲ್ಲಾ ವೃತ್ತ ದೊಡ್ಡದಾಗುತ್ತಾ ಹೋಯಿತು. ಆಟದ ಖಯಾಲಿಯಿರುವ ಒಬ್ಬಿಬ್ಬರು ಹೆಂಗಸರೂ ಹಿಂದೆ ಬೀಳದೆ ಸೇರಿಕೊಂಡರು. ಊರಿನ ಹಿರಿಯರು, ವಾಸಣ್ಣನ ಆತ್ಮೀಯರೂ ಕೈ ಹಾಕದಿದ್ದರೆ ಅಪಚಾರವಲ್ಲವೇ! ಅವರೂ ತಮ್ಮ ಸೇವೆ ಸಲ್ಲಿಸಲು ಎಲೆಗಳನ್ನು ಹಿಡಿದರು. ಹಿರಿಯರ ಜೊತೆಗೆ ಎಲೆಗಳನ್ನು ಹಿಡಿಯುವಷ್ಟು ದಾಷ್ಟ್ಯವಿಲ್ಲದಿದ್ದರೂ ಕಿರಿಯರೂ ತಮ್ಮ ಕೈಲಾದಷ್ಟು ಆಡಿ ಸತ್ತ ಹಿರಿಯ ಚೇತನಕ್ಕೆ ಶಾಂತಿ ಕೋರಬೇಡವೇ. ಅಲ್ಲೇ ಇನ್ನೊಂದು ಗುಂಪು ಹುಟ್ಟಿಕೊಂಡಿತು. ಹಾಗೆಯೇ ಮತ್ತೊಂದು ಗುಂಪಾಯಿತು. ಜಾಗ ಸಾಲದೆ ವಾಸಣ್ಣನ ಪ್ರತೀಕವಾಗಿ ಉರಿಯುತ್ತಿದ್ದ ದೀಪ ಜನ ಬಂದ ಬಂದ ಹಾಗೆ ನಿಧಾನವಾಗಿ ಸರಿ ಸರಿಯುತ್ತಾ ಅಂತೂ ಆ ದೊಡ್ಡ ಕೋಣೆಯ ಮೂಲೆಯಲ್ಲಿ ಜಾಗ ಮಾಡಿಕೊಂಡಿತು. ಅಂತೂ ಕಡೆಗೊಂದು ದಿನ ಕಿಟಕಿಯ ಕಟ್ಟೆಯನ್ನೇರಿ ಕುಳಿತು ಕೋಣೆಯ ತುಂಬಾ ಕೇಳುವ ಎಲೆಗಳ ಇನಿದಾದ ಶಬ್ದದ ಆನಂದಕ್ಕೆ ತಲೆತೂಗುತ್ತಾ ಸಾಕ್ಷಿಯಾಗತೊಡಗಿತು. ಹೀಗೆ ತನ್ನ ಪ್ರತಿಷ್ಠಿತ ತಮ್ಮನ ಸೂಚನೆಯ ಮೇರೆಗೆ ಬಂದವರೆಲ್ಲಾ ಗಂಡನ ಆತ್ಮಕ್ಕೆ ಎಷ್ಟೊಂದು ಹಿತವಾಗಿ, ಅವಿರತವಾಗಿ ಶಾಂತಿ ಕೋರುತ್ತಿರುವಾಗ ಪಾಪ ನಮ್ಮತ್ತೆ…, ಇದು ತನ್ನ ಗಂಡನ ಸಾವೆಂಬುದನ್ನೂ ಮರೆತು ಆಗಾಗ ಆ ಗುಂಪಿಗೆ ಕಾಫಿ ಬೆರಸಿಕೊಡುವುದಕ್ಕೆ ನಿಲ್ಲಬೇಕಾಯಿತು… ನಿಂತರು! ಎನ್ನುವುದು ನಮ್ಮ ಗುಬ್ಬಿಯ ಮನೆಯ ಚರಿತ್ರೆಯ ಪುಟಗಳಲ್ಲಿ ದಾಖಲಾಗಿಹೋಗಿದೆ! ಅಂತೂ ನನ್ನ ಮಾವನವರ ಆತ್ಮಕ್ಕೆ ತೃಪ್ತಿಯಾಯಿತೇ? ಆಗಿರಬಹುದು…. ಏಕೆಂದರೆ ಇಸ್ಪೀಟಾಟದಿಂದ ಆಯಿತೋ ಇಲ್ಲವೋ, ಸದಾ ಮನೆತುಂಬ ಜನರಿರಬೇಕು ಎನ್ನುವುದು ಅವರ ಒಂದು ಸ್ಥಿರವಾದ ಆಸೆ. ಊಟ, ತಿಂಡಿಯ ಹೊತ್ತಿನಲ್ಲಿ ಅದೆಷ್ಟು ಊಟದೆಲೆ ಬೀಳುತ್ತಿತ್ತೋ ಅಷ್ಟು ಖುಷಿ ಅವರಿಗೆ. ಹಳೆಯ ತಲೆಮಾರಿನ ಅನಿರ್ಬಂಧಿತ, ಅಮಾಯಕ ಮುಗ್ಧ ಪ್ರೀತಿ, ವಿಶ್ವಾಸದ ಪ್ರತೀಕದಂತಿದ್ದವರಿಗೆ ಮನೆಯೆಲ್ಲಾ ಸದಾ ಗಿಲಿಗಿಲಿಗುಟ್ಟುತ್ತಿರಬೇಕು; ನಗುವಿಂದ ತುಂಬಿರಬೇಕು ಎನ್ನುವ ಮಹದಾಸೆ. ತಮ್ಮ ಜೀವಿತಾವಧಿಯಲ್ಲಿ ಯಾರಿಗೂ ʻಕಾಫಿ ಬೇಕೆʼ ಎಂದು ಕೇಳಿ ಕೊಟ್ಟವರಲ್ಲ; ʻಈಗ ತಾನೆ ಕುಡಿದು ಬಂದೆ, ಬೇಡʼ ಎಂದರೂ ಅದು ನಿಮ್ಮನೆಯ ಕಾಫಿ, ನಮ್ಮನೆಯದು ಆಗಿಲ್ಲʼ ಎನ್ನುತ್ತಾ ʻಹೆಂಗಸರಿಗೆ ಅರಿಶಿನ ಕುಂಕುಮ ಕೊಡುವುದು ಎಷ್ಟು ಮುಖ್ಯವೋ, ಮನೆಗೆ ಬಂದವರಿಗೆ ಕಾಫಿ ಕೊಡುವುದೂ ಅಂತದೇ ಸತ್ಸಂಪ್ರದಾಯʼ ಎಂದು ಬಲವಾಗಿ ನಂಬಿ ಅಂತೆಯೇ ನಡೆದುಕೊಂಡಿದ್ದವರು. ಅವರು ಸತ್ತ ದಿನ ಐವತ್ತು ಲೀಟರ್ ಹಾಲು, ನಂತರ ದಿನವೂ ಮೂವತ್ತು ಲೀಟರ್ ಹಾಲು ಬರಿಯ ಕಾಫಿಗೇ ಖರ್ಚಾಯಿತು ಎಂದರೆ ಅವರಿಗೆ ಖಂಡಿತವಾಗಿಯೂ ತೃಪ್ತಿಯಾಗಿರಲೇ ಬೇಕು! ಕಾಫಿಯ ಕತೆಯೇ ಇಷ್ಟಾದರೆ, ಇನ್ನು ಊಟ, ತಿಂಡಿಯ ವಿವರಣೆ ಬೇಕಿಲ್ಲ ಅಂದುಕೊಳ್ಳುತ್ತೇನೆ. ಅಷ್ಟು ದಿನಗಳೂ ಭಾವಮೈದುನನ ವರಸೆಯವರಾದ ವೆಂಕಟರಾಮು ಆ ಜವಾಬ್ದಾರಿಯನ್ನು ಹೊತ್ತು ಸಮರ್ಥವಾಗಿ ನಿರ್ವಹಿಸಿ, ಅಡುಗೆಯ ಕೆಲಸವಾದ ನಂತರ ತಾವೂ ಮುಂದಿನ ಕೋಣೆಯ ಪವಿತ್ರ ಪತ್ರಗಳಿಗೊಂದು ಕೈಹಾಕಿ ತಮ್ಮ ಶ್ರದ್ಧಾಂಜಲಿಯನ್ನೂ ಅರ್ಪಿಸಿ ಕೃತಾರ್ಥರಾದರು!! “ಪಾಪ, ಅವನೂ ಸ್ವಲ್ಪ ಹೊತ್ತು ಆಡಲಿ” ಎನ್ನುವ ಸದುದ್ದೇಶದಿಂದ ಮರುದಿನಕ್ಕೆ ಬೇಕಾಗುವ ತರಕಾರಿಯನ್ನು ಮನೆಯ ಹೆಂಗಸರು ಹೆಚ್ಚಿ ಅಣಿಮಾಡಿ ಆತನ ಈ ಪವಿತ್ರ ಕೈಂಕರ್ಯಕ್ಕೆ ತಮ್ಮ ಸಹಾಯ ಹಸ್ತವನ್ನು ಚಾಚುತ್ತಿದ್ದರು. ನಮ್ಮ ಅತ್ತೆಯ
ಲಲಿತ ಪ್ರಬಂಧ ವಿಚಿತ್ರ ಆಸೆಗಳು…ಹೀಗೊಂದಷ್ಟು, ಸಮತಾ ಆರ್. “ಕಕ್ ಕಕ್ ಕಕ್ ಕೊಕ್ಕೋಕ್ಕೊ” ಅಂತ ಒಂದು ಬಿಳಿ,ಬೂದು,ಕೆಂಪು ಬಣ್ಣದ ರೆಕ್ಕೆ ಪುಕ್ಕಗಳ,ಅಂಗೈ ಅಗಲದ ಜುಟ್ಟಿದ್ದ,ಕಮ್ಮಿ ಅಂದರೂ ನಾಲ್ಕೈದು ಕೆಜಿ ತೂಗುತ್ತಿದ್ದ ಗಿರಿರಾಜ ಹುಂಜ ವೊಂದು ಹೆಜ್ಜೆಯ ಮೇಲೆ ಹೆಜ್ಜೆ ಇಡುತ್ತಾ ಗತ್ತಿನಿಂದ ,ಅತ್ತಿಂದಿತ್ತ ಇತ್ತಿಂದತ್ತ ಓಡಾಡುತ್ತಿದ್ದಾಗ,ಸುತ್ತ ನಾಲ್ಕೈದು ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸಿಕೊಂಡು ವಿದ್ಯಾಗಮ ಕಾರ್ಯಕ್ರಮದ ಅಡಿಯಲ್ಲಿ ಕಲಿಸುತ್ತಿದ್ದ ನನಗೆ ಎಷ್ಟು ಪ್ರಯತ್ನ ಪಟ್ಟರೂ ಆ ಹುಂಜನಿಂದ ಕಣ್ಣು ಕೀಳ ಲಾಗಲಿಲ್ಲ. ನನ್ನಿಂದ ಅನತಿ ದೂರದಲ್ಲಿ ಕುಳಿತಿದ್ದ ನನ್ನ ಸಹೋದ್ಯೋಗಿ ಗೆಳತಿ ನಾನು ಹುಂಜವನ್ನೆ ನೋಡುತ್ತಿರುವುದನ್ನು ಕಂಡು,ನನ್ನ ಕೋಳಿ ಪ್ರೀತಿ ಅರಿತಿದ್ದ ಆಕೆ”ಮೇಡಂ ,ಕೋಳಿ ಅನಾಟಮಿ ಆಮೇಲೆ ಮಾಡಿದ್ರಾಯಿತು,ಈಗ ಮಕ್ಕಳ ಕಡೆ ಗಮನ ಕೊಡಿ” ಎಂದು ನಕ್ಕಾಗ ನಾಚಿಕೆ ಎನಿಸಿ ಮತ್ತೆ ಪಾಠದ ಕಡೆ ಮರಳಿದೆ. ಇದಾಗಿದ್ದು ಹೇಗೆಂದರೆ, ಕರೋನ ಕಾರಣ ದಿಂದಾಗಿ,ಶಾಲೆಗಳು ತೆರೆಯಲಾಗದೆ ಶಿಕ್ಷಕರೇ ಮಕ್ಕಳಿರುವ ಕಡೆ ಹೋಗಿ ಕಲಿಸುವ ವಿದ್ಯಾಗಮ ಎನ್ನುವ ಕಾರ್ಯಕ್ರಮದಡಿಯಲ್ಲಿ,ನನಗೆ ಮತ್ತು ನನ್ನ ಗೆಳತಿಗೆ ಹಂಚಿಕೆಯಾದ ಏರಿಯಾಗಳಲ್ಲಿ, ಒಂದು ವಿಶಾಲವಾದ ತೋಟದ ಮನೆಯ ಅಂಗಳದಲ್ಲಿ ಮಕ್ಕಳ ಕೂರಿಸಲು ಒಂದು ವರಾಂಡ ಬಳಸಿಕೊಳ್ಳಲು ಅವಕಾಶ ಸಿಕ್ಕಿತು. ತೋಟದ ಮನೆ ಅಂದ ಮೇಲೆ ಕೇಳಬೇಕೆ,ಎಲ್ಲೆಲ್ಲೂ ಹಸಿರು,ಶುದ್ಧವಾದ ಗಾಳಿ,ಬೆಳಕು,ಕಲಿಕೆಗೆ ಒಳ್ಳೆಯ ವಾತಾವರಣ ಅನ್ನಿಸಿ,ನಾವಿಬ್ಬರೂ ಬೇರೆ ಬೇರೆ ಗುಂಪು ಗಳಲ್ಲಿ ಕುಳಿತು ಕಲಿಸುತ್ತಿದ್ದಾಗಲೇ ಆ ಹುಂಜ ಬಂದು ನಮ್ಮ ಮನ ಸೆಳೆದದ್ದು. ಅಂತೂ ತರಗತಿಗಳ ಮುಗಿಸಿ ನಾವಿಬ್ಬರೂ ಮರಳಿ ಹಿಂದಿರುಗುವಾಗ ನಾನು ನನ್ನ ಗೆಳತಿಗೆ”ಅಲ್ಲರಿ, ತೋಟದ ಮನೆ ಇದ್ರೆ ಎಷ್ಟು ಚಂದ ಅಲ್ವಾ,ಹಸು,ಕುರಿ,ಕೋಳಿ ,ನಾಯಿ ,ಬೆಕ್ಕು ಎಲ್ಲಾ ಸಾಕೊಂಡು ಇರಬಹುದಿತ್ತು.ದಿನ ನಿತ್ಯ ಮನೆ ಕೆಲಸ,ಹೊರಗಿನ ಕೆಲಸ ಅಂತ ದಣಿಯೋದಕ್ಕಿಂತ ಎಷ್ಟೋ ವಾಸಿ”ಎಂದು ಕೊರಗಿದಾಗ ಅವರು”ಹೌದಪ್ಪ,ನನಗಂತೂ ಗಿಡ,ಮರ,ಪ್ರಾಣಿ,ಪಕ್ಷಿ ಎಲ್ಲಾ ಇರೋ ಮನೆ ಬೇಕು ಅನಿಸುತ್ತೆ, ಈ ಕಾಲದಲ್ಲಿ ಅದೆಲ್ಲ ನಮ್ಮ ಕೈ ಗೆಟುಕದ ಆಸೆಗಳೆ ಬಿಡಿ,ಈಗಿನ ರೇಟ್ ನಲ್ಲಿ ತೋಟದ ಮನೆ ಮಾಡಿದ ಹಾಗೆಯೇ”ಎಂದವರು, “ಮೇಡಂ ನನಗೆ ಒಂದು ವಿಚಿತ್ರ ಆಸೆಯಿತ್ತು,ಯಾರಿಗೂ ಹೇಳಿಲ್ಲ,ನಿಮಗೆ ಹೇಳ್ತೀನಿ ,ನಗೋದಿಲ್ಲ ತಾನೇ”ಎಂದಾಗ,ನನಗೆ ಕುತೂಹಲ ತಡೆಯಲಾರದೆ,”ಛೆ ಖಂಡಿತ ಇಲ್ಲ,ಅದೇನು ಹೇಳಿ “ಎಂದೆ. “ಅದೂ,ನನಗೆ ಚಿಕ್ಕಂದರಿಂದ ಒಂದು ಕೋಳಿ ಫಾರ್ಮ್ ಮಾಡೋ ಆಸೆ ಇದೆ,ಚೆನ್ನಾಗಿ ಕೋಳಿ ಸಾಕಿ,ಒಂದು ಆಪೆ ಆಟೋದಲ್ಲಿ ಹಾಕ್ಕೊಂಡು,ಅಂಗಡಿ ಅಂಗಡಿಗೆ,ನಾನೇ ಆಪೆ ಓಡಿಸ್ಕೊಂಡು ಹೋಗಿ ಸಪ್ಲೈ ಮಾಡ್ಕೊಂಡು,ವ್ಯವಹಾರ ಮಾಡ್ಬೇಕು ಅನ್ನಿಸುತ್ತಿತ್ತು,”ಎಂದಾಗ, ನಗೋದಿಲ್ಲ ಅಂತ ಹೇಳಿದ್ರೂ ನನ್ನಿಂದ ತಡೆಯಲಾರದೆ ನಗು ಕಟ್ಟೆಯೊಡೆದು ಹರಿಯಲಾರಂಭಿಸಿತು. ಅವರೂ ನಗುತ್ತಾ”ನೋಡಿದ್ರ ನಾನ್ ಹೇಳ್ಳಿಲ್ವ,ವಿಚಿತ್ರ ಆಸೆ ಅಂತಾ”ಅಂತ ಹೇಳಿ ತಾವೂ ನಗುವಿಗೆ ಜೊತೆಯಾದರು. ಮಾರನೆಯದಿನ ಶಾಲೆಯಲ್ಲೂ ಇದೇ ವಿಷಯದ ಚರ್ಚೆ ಮತ್ತು ನಗು.ಎಲ್ಲರ ಮನದಾಳದ ಆಸೆಗಳು ಹೇಳಿಕೊಳ್ಳ ಲು ಆಗದಿರುವುವು ಆಚೆ ಬರಲಾರಂಭಿಸಿದವು. ನನ್ನ ಸಹೋದ್ಯೋಗಿಯೊಬ್ಬರು ಮೆಲು ಮಾತಿನ,ಮೃದು ಸ್ವಭಾವದ, ಸಾಂಪ್ರದಾಯಿಕ ಉಡುಗೆ ತೊಡುಗೆಗಳ,ದೇವರು ದಿಂಡಿರ ಮೇಲೆ ಅಪಾರ ನಂಬಿಕೆ ಭಕ್ತಿ ಹೊಂದಿರುವ ಮಹಿಳೆ.ಅವರ ಆಸೆ ಮಾತ್ರ,ಅವರ ಬಾಯಲ್ಲೇ ಕೇಳಿದಂತೆ”ನನಗಂತೂ ಒಂದು ಬುಲ್ಲೆಟ್ ಬೈಕ್ ತೊಗೊಂಡು, ಬ್ಯಾಕ್ ಪ್ಯಾಕ್ ಹಾಕ್ಕೊಂಡು ಇಡೀ ಪ್ರಪಂಚ ಸುತ್ತಬೇಕು ಅನ್ನೋ ಆಸೆ ಇದೆ”ಎನ್ನುವುದನ್ನು ಕೇಳಿ,ಸಾಂಪ್ರದಾಯಿಕ ಮನಸ್ಸಲ್ಲಿ ಆಧುನಿಕತೆಗೆ ತುಡಿಯುವ ಚೈತನ್ಯವೂ ಇದೆ ಎನ್ನಿಸಿ ಖುಷಿಯಾಯಿತು. ಮರುದಿನ ಗೆಳತಿಯೊಬ್ಬಳು ಕರೆಮಾಡಿ ಹರಟುತ್ತಿದ್ದಾಗ ಅವಳಿಗೆ ಈ ಆಸೆಗಳ ವಿಷಯಗಳ ಹೇಳಿದಾಗ ಅವಳು”ಅಯ್ಯೋ ಅದಕ್ಕೇನು,ನನಗಂತೂ ದಿನಕ್ಕೊಂದು ರೀತಿಯ ವಿಚಿತ್ರ ಆಸೆಗಳು ಬರುತ್ತವೆ,ಯಾರ ಹತ್ತಿರ ಹೇಳೋದು? ನನಗೆ ನಾನೇ ಸಮಾಧಾನ ಮಾಡಿಕೊಂಡು ಸುಮ್ಮನಾಗುತ್ತೇನೆ.ಮೊನ್ನೆ ದಿನ ಏನಾಯಿತು ಗೊತ್ತಾ ನನ್ನ ಗಂಡನ ಸ್ನೇಹಿತರೊಬ್ಬರ ಕುಟುಂಬ ಮೊದಲ ಬಾರಿ ನಮ್ಮ ಮನೆಗೆ ಯಾವುದೋ ಊರಿಂದ ಬರುತ್ತಾ ಇದ್ದರು,ನಾನು ಅಡಿಗೆ ಎಲ್ಲಾ ಮಾಡಿಕೊಂಡು ಸತ್ಕಾರ ಮಾಡಲು ರೆಡಿಯಾಗಿದ್ದೆ . ಮಧ್ಯಾಹ್ನದಷ್ಟರಲ್ಲಿ ಅವರೆಲ್ಲ ಬಂದು ನನ್ನ ಗಂಡ ಪರಸ್ಪರ ಪರಿಚಯ ಕೂಡ ಮಾಡಿ ಕೊಟ್ಟರು, ಇವರ ಆ ಸ್ನೇಹಿತ ಎಷ್ಟು ಮುದ್ದು ಮುದ್ದಾಗಿದ್ದ ಅಂದರೆ ನನಗೆ ಇದ್ದಕ್ಕಿದ್ದಂತೆ ಆ ಮನುಷ್ಯನನ್ನು ನೋಡಿ ಚಿಕ್ಕ ಮಕ್ಕಳನ್ನು ನೋಡಿದರೆ ಎತ್ತಿಕೊಳ್ಳಬೇಕು ಅನ್ನೋ ಆಸೆಯಾಗುವುದಿಲ್ಲವ ಆ ರೀತಿ ಅನ್ನಿಸಿಬಿಟ್ಟಿತು. ಈ ಹುಚ್ಚಿಗೇನು ಹೇಳುವುದು.ನನ್ನ ಗಂಡನಿಗೆ ಹೇಳುವ ಧೈರ್ಯ ನನಗಾಗಲಿಲ್ಲ.ಬಚ್ಚಲು ಮನೆಗೆ ಹೋಗಿ ಜೋರಾಗಿ ನಕ್ಕು ಸುಮ್ಮನಾದೆ” ಎಂದಾಗ ಸೋಜಿಗ ವೆನಿಸಿ”ಅಲ್ಲ ಕಣೇ ಯಾಕೆ ಹಾಗನ್ನಿಸಿದ್ದು,ನೀನು ನೋಡಿದರೆ ಗೌರಮ್ಮನ ಹಾಗೆ ಇರ್ತಿಯಾ ಯಾವಾಗಲೂ,ಅದು ಯಾಕೆ ಅವನ ಮೇಲೆ ಹಾಗೆ ಅನ್ನಿಸಿತು”ಅಂದಿದಕ್ಕೆ,”ಗೊತ್ತಿಲ್ಲ ಕಣೆ,ಏನೋ ಆ ಕ್ಷಣ ಹಾಗನ್ನಿಸಿತು,ಆಮೇಲೆ ಅವರೆಲ್ಲ ಹೋದ ಮೇಲೆ ಏನೂ ಅನ್ನಿಸಲಿಲ್ಲ”ಎಂದು ಸುಮ್ಮನಾದಳು. ಹುಡುಕುತ್ತಾ ಹೋದರೆ ಪ್ರತಿಯೊಬ್ಬರಲ್ಲೂ ಈ ರೀತಿ ” ಯಾರಿಗಾದರೂ ಹೇಳಿದರೆ ನಗೆಪಾಟಲಿಗೆ ಈಡಾಗುವೆನೇನೋ ” ಅನ್ನಿಸುವ,ಮುಗ್ದ,ವಿಚಿತ್ರ ಬಯಕೆಗಳು ಇದ್ದೇ ಇರುತ್ತವೆ.ಮಕ್ಕಳಂತೂ ಬಿಡಿ, ಕೇಳುತ್ತಾ ಹೋದರೆ ಒಂದು ಕಿನ್ನರ ಪ್ರಪಂಚವನ್ನೇ ಸೃಷ್ಟಿ ಮಾಡುವಷ್ಟು ಕಥೆಗಳ ಹೇಳಿಯಾರು. ನನ್ನ ಮಕ್ಕಳಿಬ್ಬರೂ ಚಿಕ್ಕವರಿದ್ದಾಗ ನನ್ನ ಮನೆ ಕೆಲಸದ ಸಹಾಯಕ್ಕೆ ಸಾವಿತ್ರಮ್ಮ ಅಂತ ಒಬ್ಬರು ಮಹಿಳೆ ಬರುತ್ತಿದ್ದರು.ನನ್ನ ಶಾಲೆ ಮನೆಯಿಂದ ದೂರ ಇದ್ದುದರಿಂದ ದಿನವೂ ಬೆಳಿಗ್ಗೆ ಎದ್ದು ತರಾತುರಿಯಲ್ಲಿ ಹೊರಟು ಹೋಗುವ ಧಾವಂತದಲ್ಲಿರುತ್ತಿದ್ದ ನಾನು ಮಕ್ಕಳ ಮಾತುಗಳ ಕಡೆಗೆ ಅಷ್ಟು ಗಮನ ನೀಡಲು ಆಗದೆ,ಸುಮ್ಮನೆ ಅವರು ಹೇಳಿದ್ದಕ್ಕೆಲ್ಲಾ “ಹೂಂ” ಗುಟ್ಟಿ ಕೊಂಡು ಇರುತ್ತಿದ್ದೆ.ಅವರು ಹೇಳಿದ್ದಕ್ಕೆ ಸರಿಯಾದ ಉತ್ತರ ನನ್ನಿಂದ ಬಾರದ ಕಾರಣ ಅವರ ಗಮನವೆಲ್ಲ ಸಾವಿತ್ರಮ್ಮನ ಕಡೆ ತಿರುಗಿತು. ಅವಳೋ ಕೆಲಸ ಮಾಡಿಕೊಂಡೇ ಮಕ್ಕಳ ಜೊತೆ ಮಾತೇ ಮಾತು.”ಹೌದಾ ಪುಟ್ಟಾ,ಆಮೇಲೆ,ಓಹ್ ಹಂಗಾ,ಅಯ್ಯೋ ನಂಗೆ ಗೊತ್ತೇ ಇರಲಿಲ್ಲ”ಹೀಗೆ ಮಕ್ಕಳ ಜೊತೆ ಮಕ್ಕಳಾಗಿ ಮಾತನಾಡುತ್ತಾ ಇರುತಿದ್ದವಳನ್ನು ಮಕ್ಕಳಿಬ್ಬರೂ ಬಹಳ ಹಚ್ಚಿಕೊಂಡು ಬಿಟ್ಟಿದ್ದರು.ಅವರಿಗೆ ಗೊತ್ತಿದ್ದ ಭೂಮಿ ಮೇಲಿರೋ ವಿಷಯವನ್ನೆಲ್ಲ ಅವಳ ಕಿವಿಗೆ ತುಂಬಬೇಕು.ನನಗೆ ಕೆಲವು ಬಾರಿ ಅವರ ಕುಚೇಷ್ಟೆಯ ಮಾತುಗಳಿಗೆ ರೇಗಿ ಹೋದರೂ ಅವಳು ಮಾತ್ರ ಒಂದು ದಿನವೂ ಬೇಸರಿಸಿದವಳೇ ಅಲ್ಲ. ಆಗ ಒಂದು ದಿನ ಸಂಜೆ ಸುಮ್ಮನೆ ಕುಳಿತಿದ್ದಾಗ ಮಕ್ಕಳನ್ನು “ದೊಡ್ಡವರಾದ ಮೇಲೆ ಏನಾಗಬೇಕು ಅನ್ನೋ ಆಸೆ ಇದೆ “ಎಂದು ಕೆಣಕಿದೆ,ನನ್ನ ಮಗಳು ಪಟ್ ಅಂತ ” ನಾನಂತೂ ದೊಡ್ಡವಳಾದ ಮೇಲೆ ಮನೆ ಮನೆಗೆ ಹೋಗಿ ಪಾತ್ರೆ ತೊಳೆಯುವ ಸಾವಿತ್ರಮ್ಮ ಆಗ್ತೀನಿ”ಅಂತ ಘೋಷಿಸಿಯೆ ಬಿಟ್ಟಳು. ಆ ಉತ್ತರವನ್ನು ಕೇಳಿ ನಿಬ್ಬೆರಗಾದ ನನಗೆ ನಗು ತಡೆಯದಾದರೂ, ಮಕ್ಕಳ ನಿಷ್ಕಲ್ಮಶ ಮನಸ್ಸನ್ನು ಪ್ರೀತಿ ಸೆಳೆಯುವಷ್ಟು ಮತ್ತೇನೂ ಸೆಳೆಯದು ಅನ್ನಿಸಿತು. ಮಾರನೇ ದಿನ ಸಾವಿತ್ರಮ್ಮನಿಗೆ ಹೇಳಿದಾಗ ಅವಳ ಕಣ್ಣಾಲಿಗಳು ತುಂಬಿ ಬಂದು”ಅಯ್ಯೋ ನನ್ನ ಕಂದಾ” ಎಂದು ಮಗಳ ಮುದ್ದಿಸಿದ್ದೇ ಮುದ್ದಿಸಿದ್ದು. ಇನ್ನು ಶಾಲೆಯಲ್ಲಿ ಮಕ್ಕಳನ್ನು “ದೊಡ್ಡವರಾದ ಮೇಲೆ ಏನಾಗಬೇಕು ಅಂದುಕೊಂಡಿದ್ದೀರಿ ಎಂದು ಹೇಳಿ” ಎಂದು ಕೇಳಿದರೆ,ದೊಡ್ಡ ಮಕ್ಕಳಾದರೆ,”ಡಾಕ್ಟರ್,ಎಂಜಿನಿಯರ್, ಆರ್ಮಿ,ಡ್ರೈವರ್,ಪೊಲೀಸ್ ,ಟೀಚರ್”ಅಂತೆಲ್ಲ ಉತ್ತರ ಹೇಳಿದರೆ,ಚಿಕ್ಕವರಲ್ಲಿ, ಹುಡುಗರೆಲ್ಲ ದೊಡ್ಡ ಲಾರಿಯಿಂದ ಶುರುವಾಗಿ ರೈಲಿನವರೆಗೆ ಪ್ರಪಂಚದಲ್ಲಿರುವ ಎಲ್ಲಾ ವಾಹನಗಳನ್ನು ಓಡಿಸುವವರೆ.ಕೋಳಿ ,ಮೀನಂಗಡಿ ಇಡುವವರು, ಐಸ್ಕ್ರೀಮ್ ಡಬ್ಬದಲ್ಲಿ ಹೊತ್ತು ಮಾರುವವರು,ಸೈಕಲ್ ರಿಪೇರಿ,ಮೊಬೈಲ್ ರಿಪೇರಿ ಅಂಗಡಿ ಇಡುವವರು ಎಲ್ಲಾ ಸಿಕ್ಕರು.ಹುಡುಗಿಯರಲ್ಲಿ ಮಾತ್ರ ಬಹಳಷ್ಟು ಜನಕ್ಕೆಅವರ ಟೀಚರ್ ಥರ ಆಗೋ ಆಸೆ. ಇಷ್ಟೆಲ್ಲಾ ಹೇಳಿ ಇನ್ನು ನನ್ನ ಆಸೆ ಹೇಳದೆ ಇದ್ದರೆ ಹೇಗೆ.ಆಗಿನ್ನೂ ಹೈಸ್ಕೂಲ್ ನಲ್ಲಿದ್ದೆ.ಅಪಾರ ಓದುವ ಹುಚ್ಚಿದ್ದ ಅಪ್ಪ ತರುವ ಪುಸ್ತಕಗಳನ್ನೆಲ್ಲಾ ನಾನೂ ಓದುವ ಚಪಲ.ಒಂದು ದಿನ ಅಪ್ಪ ಒಂದು ಚಿಕ್ಕ ಪುಸ್ತಕ ತಂದು ಅದನ್ನು ಓದಲು ಕುಳಿತವರು ಮುಗಿಯುವ ತನಕ ಮೇಲೇಳಲೆ ಇಲ್ಲ. ಮಾರನೇ ದಿನ ನಾನು ‘ ಇದ್ಯಾವ ಪುಸ್ತಕ’ ಅನ್ನೋ ಕುತೂಹಲದಿಂದಾಗಿ ನೋಡಿದರೆ,ಅದು ಜಪಾನಿನ ಕೃಷಿ ವಿಜ್ಞಾನಿ ಮಸನೊಬು ಫುಕುವೋಕ ರವರ ,ಪೂರ್ಣಚಂದ್ರ ತೇಜಸ್ವಿಯವರು ಅನುವಾದಿಸಿದ್ದ “ಒಂದು ಹುಲ್ಲೆಸಳ ಕ್ರಾಂತಿ”ಪುಸ್ತಕ. ಓದಲು ಕುಳಿತಿದ್ದೆ ಬಂತು,ಮುಗಿಸುವ ತನಕ ಕೈಬಿಡಲು ಮನಸ್ಸಾಗಲಿಲ್ಲ. ಆ ಪುಸ್ತಕ ಒಳಗೊಂಡಿದ್ದ , ಫುಕುವೊಕರವರ, ‘ನಿಸರ್ಗದೊಂದಿಗೆ ಹೊಂದಿಕೊಂಡು ಮನುಷ್ಯ ನೆಮ್ಮದಿ ಯಾಗಿ ಹೇಗೆ ಬದುಕಬಹುದೆಂಬ ವಿಚಾರ ಧಾರೆ,ಅವರ ನೈಸರ್ಗಿಕ ಕೃಷಿ ಪದ್ಧತಿ ಅನುಭವಗಳು , ಮನುಷ್ಯ ಹೇಗೆ ಪ್ರಕೃತಿಯ ಒಂದು ಭಾಗ ಮಾತ್ರ ‘ ಎಂದೆಲ್ಲ ವಿವರಿಸಿದ್ದ ವಿಷಯಗಳು ,ಆಗ ಎಷ್ಟು ಇಷ್ಟವಾಯಿತೆಂದರೆ ತೊಗೊ ಅವತ್ತಿನಿಂದಲೆ ಕನಸು ಮನಸ್ಸಲ್ಲೆಲ್ಲ ನನ್ನದೇ ಆದ ಒಂದು ನೈಸರ್ಗಿಕ ಕೃಷಿ ಪದ್ಧತಿಯ ತೋಟ ಕಾಡ ಲಾರಂಭಿಸಿತು.ಆದರೆ ಯಾರಿಗಾದರೂ ಹೇಳುವುದುಂಟ! ಶಾಲೆಯಲ್ಲಿ ಆಗ ಒಂದು ಪರೀಕ್ಷೆಯಲ್ಲಿ ಕೇಳಿದ್ದ “ನಿಮ್ಮ ಭವಿಷ್ಯದ ಕನಸು “ಅನ್ನೋ ಬಗ್ಗೆ ಪ್ರಬಂಧ ಬರೆಯಲು ಹೇಳಿದ್ದಾಗ, ಪುಟಗಟ್ಟಲೆ ನನ್ನ ತೋಟದ ಕನಸಿನ ಬಗ್ಗೆ ಬರೆದಿದ್ದು ಬರೆದಿದ್ದೇ.ಆದರೆ ಆ ಕನಸು ನನಸಾಗುವುದು ಸಾಧ್ಯವೇ? ತವರು ಮನೆ ಜಮೀನು ಅಣ್ಣ ತಮ್ಮಂದಿರದ್ದು,ಗಂಡನ ಮನೆ ಜಮೀನು ಗಂಡನದ್ದು.ಆಸೆಯ ಹೇಳಿದರೆ ಸಿಗುವ ಉತ್ತರ “ನಿನಗೆ ತಲೆ ಕೆಟ್ಟಿದೆ”ಅಂತ. ಬಹುಶಃ ಕನಸು ಕಾಣುವುದು,ಆಸೆಗಳ ಪಡುವುದು ಹೆಣ್ಣು ಗಂಡುಗಳಿಬ್ಬರಿಗೂ ಸಾಮಾನ್ಯವಾಗಿ ಬಂದಿರುವ ಗುಣಗಳೇ. ಆದರೆ ಗಂಡು ಮಕ್ಕಳ ಆಸೆ ಕನಸುಗಳೆಂದೂ ವಿಚಿತ್ರ ವೆನಿಸುವುದಿಲ್ಲ. ಏನಾದರೂ ಭಿನ್ನ ಮಾರ್ಗದಲ್ಲಿ ಯೋಚಿಸಿ ಅದನ್ನು ಸಾಕಾರ ಮಾಡಿಕೊಳ್ಳಲು ಹೊರಟರೆ ಅವರು ಕಷ್ಟ ಪಟ್ಟು ಕೆಲಸ ಮಾಡಿದರೆ ಸಾಕು, ಅಂದುಕೊಂಡಿದ್ದೆಲ್ಲ ಸಿಕ್ಕರೂ ಸಿಗಬಹುದು.ಆದರೆ ಹೆಣ್ಣು ಮಕ್ಕಳ ಅಸಾಮಾನ್ಯ ಕನಸುಗಳು ಬಾಯಿಂದ ಆಚೆ ಬರಲೂ ಅಸಾಧ್ಯ ಧೈರ್ಯ ಬೇಕು,ಅಕಸ್ಮಾತ್ ಹೇಳಿಕೊಂಡರೂ ಅದನ್ನು ಸಹಜವಾಗಿ ಸ್ವೀಕರಿಸುವುದು ಎಲ್ಲರಿಂದ ಆಗದು. ಬಹುಶಃ ಮೇಲ್ವರ್ಗದವರಲ್ಲಿ, ಇಲ್ಲವೇ ಎಲ್ಲೋ ಕೆಲವರು ಅದೃಷ್ಟವಂತರಾಗಿದ್ದಲ್ಲಿ, ಗಟ್ಟಿ ಎದೆಯ ಧೈರ್ಯಶಾಲಿ ಗಳಾಗಿದ್ದಲ್ಲಿ, ಇಲ್ಲವೇ ಪ್ರೋತ್ಸಾಹಿಸುವ ಪೋಷಕರಿದ್ದರೆ ಮಾತ್ರ ವಿಚಿತ್ರ ಕನಸುಗಳು ನನಸಾಗುವುದು ಸಾಧ್ಯವೇನೋ. ಬಹುತೇಕ ಹೆಣ್ಣು ಮಕ್ಕಳಿಗೆ ಸಮಾಜ ನಿರ್ಮಿಸಿರುವ ಚೌಕಟ್ಟಿನೊಳಗೆ,ಆರಾಮದಾಯಕ ಕ್ಷೇತ್ರಗಳಲ್ಲೇ ತಮ್ಮ ತಮ್ಮ ಜೀವನ ರೂಪಿಸಿಕೊಳ್ಳುವ ಸಲಹೆ ಸೂಚನೆಗಳು ಸಿಗುವುದೇ ಹೆಚ್ಚು.ಅದರಾಚೆ ಯೋಚಿಸಿದರೆ ಕೆಲವು “ಅದು ಹೆಂಗಸರಿಗೆ ಸಾಧ್ಯವಿಲ್ಲ,ಅವರಿಂದಾಗದು”ಎಂದಾದರೆ, ಹಲವು ನಗೆಪಾಟಲಿಗೆ ಒಳಗಾಗುವ ವಿಷಯಗಳೇ. ಎಲ್ಲೋ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಹೊರತಾದ ಉದಾಹರಣೆಗಳು ಸಿಗಬಹುದೇನೋ. ಅನಿವಾರ್ಯವಾಗಿ ಬೇರೆ ದಾರಿ ಕಾಣದೆ ಜೀವನೋಪಾಯಕ್ಕಾಗಿ ಕೆಲವು ಹೆಂಗಸರು ಗಂಡಸರು ಮಾಡುವ ವೃತ್ತಿಗಳನ್ನು,ಉದಾಹರಣೆಗೆ,ಆಟೋ ಡ್ರೈವರ್, ಬಸ್, ಟ್ರೈನ್ ಡ್ರೈವರ್ ಗಳಂತಹ ಕೆಲಸ ಕೈಗೊಂಡಿರುವ ಉದಾಹರಣೆಗಳಿವೆ,ಆದರೆ ಅದೇ ವೃತ್ತಿ ಕೈಗೊಂಡು ಮಾಡುತ್ತೇನೆ ಅನ್ನುವ ಮನೋಭಾವ ಹೆಂಗಸರಲ್ಲಿಯೇ ಬರುವುದು ಅಪರೂಪದಲ್ಲಿ ಅಪರೂಪವೇ.ಅದನ್ನು ಸಹಜವಾಗಿ ಯಾರೂ ತೆಗೆದುಕೊಳ್ಳುವುದಿಲ್ಲ.ಯಾರಾದರೂ ಹುಡುಗಿ ಪೈಲಟ್ ಆದರೆ ಇಲ್ಲವೇ ಸೈನ್ಯ ಸೇರಿದರೆ ಅದು ದೊಡ್ಡ ಸಾಧನೆ ಎಂದು ಬಿಂಬಿಸುವುದುದಕ್ಕಿಂತ ಸಹಜವಾಗಿ ಯಾಕೆ ತೆಗೆದುಕೊಳ್ಳಬಾರದು. ಎಲ್ಲಾ ರೀತಿಯ ವಿದ್ಯಾಭ್ಯಾಸದ ಕೋರ್ಸ್ ಗಳು,ವೃತ್ತಿ ಪರ ತರಬೇತಿಗಳು,ಉದ್ಯೋಗಗಳು ಎಲ್ಲರಿಗೂ ಸಮಾನ ಅನ್ನುವ ಮನೋಭಾವ ಸಹಜವಾಗಿ ಮಕ್ಕಳಲ್ಲಿ ಯಾಕೆ ಬೆಳೆಸಬಾರದು.? ಆ ಸಮಾನತೆಯ ಸಮಾಜ ನಿರ್ಮಾಣ ಬಹುಶಃ ಸಧ್ಯಕ್ಕಂತೂ ಸಾಧ್ಯವಿಲ್ಲ. ಅಲ್ಲಿಯವರೆಗೆ ಇರುವ ಕನಸುಗಳ, ಆಸೆಗಳ ಅದುಮಿ. ಇಟ್ಟುಕೊಳ್ಳಲಾದೀತೇ. ಅವುಗಳಿಗೆ ಪರ್ಯಾಯವಾಗಿ ಬೇರೆ ಹವ್ಯಾಸಗಳ ಬೆಳೆಸಿಕೊಂಡು ಖುಷಿ ಪಡುವವರು ಇದ್ದಾರೆ.ಬುಲ್ಲೆಟ್ ಓಡಿಸಲಾಗದಿದ್ದರೂ ಸ್ಕೂಟಿ,ಕಾರ್ ಓಡಿಸುವುmದು ಕಲಿತು ಓಡಾಡುವುದು ಇದ್ದೇ ಇದೆ. ಪುಕುವೋಕಾನ ತೋಟ ನನ್ನ ಮನೆಯ ಬಾಲ್ಕನಿಯ ಕುಂಡಗಳಲ್ಲಿ ಅರಳುತ್ತಿದೆ.ನಾನಂತೂ ಕುಂಡದಲ್ಲಿ ಇರುವ ಗಿಡಗಳ ಜೊತೆಗೆ ಬೇರೆ ಯಾವ ಗಿಡ ಹುಟ್ಟಿದರೂ ಅದ ಕೀಳಲಾರೆ.ಗಿಡಗಳಿಗೆ ರೋಗ ,ಕೀಟ ಬಾಧೆ ತಗುಲಿದರೆ ಯಾವ ಕೀಟನಾಶಕಗಳ ಕೂಡ ಬಳಸುವುದಿಲ್ಲ.ಗಿಡ ಗಟ್ಟಿಯಾಗಿದ್ದರೆ ತಾನೇ ಬದುಕುತ್ತದೆ ಇಲ್ಲದೇ ಹೋದರೆ ಇನ್ನೊಂದು ಗಿಡಕ್ಕೆ ದಾರಿ ಮಾಡಿಕೊಟ್ಟು ಮಣ್ಣು ಸೇರುತ್ತದೆ. ಈ ರೀತಿ ವರುಷಗಟ್ಟಲೆ ಕುಂಡದ ಸೀಮಿತ ಮಣ್ಣು,ಬಾಲ್ಕನಿಯ ಕೊಂಚ
ವಿಚಿತ್ರ ಆಸೆಗಳು…ಹೀಗೊಂದಷ್ಟು, Read Post »
ಲೇಖನ ಗಜಲ್ ಸಾಹಿತ್ಯ ಮತ್ತು ಸವಾಲುಗಳು ಡಾ. ಮಲ್ಲಿನಾಥ ಎಸ್.ತಳವಾರ ಪ್ರಕೃತಿಯನ್ನೊಮ್ಮೆ ಅವಲೋಕಿಸಿದಾಗ ‘ಮನುಷ್ಯ’ ನ ವಿಕಾಸ ದಿಗ್ಭ್ರಮೆಯನ್ನು ಮೂಡಿಸುತ್ತದೆ. ಅದೊಂದು ರೀತಿಯಲ್ಲಿ ಪವಾಡವೇ ಸರಿ ! ಎಲ್ಲ ಪ್ರಾಣಿ ಸಂಕುಲಗಳಿಂದ ಆತನು ವಿಭಿನ್ನವೆನಿಸಿದ್ದು ಮಾತ್ರ ಭಾಷೆಯ ಬಳಕೆಯಿಂದ. ತನ್ನ ಭಾವನೆಗಳನ್ನು ಸಶಕ್ತವಾಗಿ ಅಭಿವ್ಯಕ್ತಿಪಡಿಸಲು ‘ಭಾಷೆ’ ಯನ್ನು ಸಾಧನವನ್ನಾಗಿ ಮಾರ್ಪಡಿಸಿಕೊಂಡನು. ಈ ಭಾಷೆಯ ಉದಯದೊಂದಿಗೆ ಸಾಹಿತ್ಯವೂ ಉದಯವಾಯಿತು ಎನ್ನಬಹುದು. “ಭಾಷೆಯ ಉದಯವೆಂದರೆ ಸಾಹಿತ್ಯದ ಉದಯವೆ ಸರಿ” ( ಕನ್ನಡ ಸಾಹಿತ್ಯ ಚರಿತ್ರೆ, ಪು- ೦೧) ಎಂಬ ರಂ. ಶ್ರೀ. ಮುಗುಳಿಯವರ ಮಾತು ಇದನ್ನೇ ಪುಷ್ಟಿಕರಿಸುತ್ತದೆ. ಜ್ಞಾನ ಸಂಪಾದನೆ ಮತ್ತು ಜ್ಞಾನ ಪ್ರಸಾರಗಳ ಅತ್ಯಂತ ಪ್ರಬಲ ಪರಿಣಾಮಕಾರಿ ಮಾಧ್ಯಮವೇ ಸಾಹಿತ್ಯ. ಇದು ಆಹ್ಲಾದಕರವೂ, ಆಕರ್ಷಕವೂ, ಜೀವನ ಸೌಂದರ್ಯದಾಯಕವೂ, ಸಂಸ್ಕೃತಿ ಸಂಪನ್ನವೂ, ಬುದ್ಧಿ ಮನಸ್ಸುಗಳ ವರ್ಧಕವೂ ಆಗಿದೆ. ಈ ನೆಲೆಯಲ್ಲಿ “ರಸಾನುಭವದ ಸುಂದರವಾದ ಅಭಿವ್ಯಕ್ತಿಯೇ ಸಾಹಿತ್ಯ”.(ರಂ. ಶ್ರೀ. ಮುಗುಳಿ, ಕನ್ನಡ ಸಾಹಿತ್ಯ ಚರಿತ್ರೆ, ಪು- ೦೧) ಪಾದರಸದಂತೆ ಪರಿವರ್ತನಶೀಲವಾದ ಪ್ರಪಂಚದ ಜ್ಞಾನ, ವಿಜ್ಞಾನ, ಸಂಸ್ಕೃತಿಗಳನ್ನು ತಲೆಮಾರಿನಿಂದ ತಲೆಮಾರಿಗೆ ಪಸರಿಸುತ್ತ, ಮನುಕುಲದ ಜೀವನವನ್ನು ಪುಷ್ಟಿಕರಿಸುತ್ತ, ತುಷ್ಟಿಗೊಳಿಸುತ್ತ, ವಿಕಾಸಗೊಳಿಸುತ್ತ, ಪರಿಪೂರ್ಣತೆಯ ಕಡೆಗೆ ಕರೆದೊಯ್ಯುವುದೇ ಸಾಹಿತ್ಯದ ಪರಮಗುರಿ. ಸಾಹಿತ್ಯವೂ ಬದುಕಿನಂತೆಯೇ ಬೆಳೆಯುತ್ತದೆ. ಅದರಲ್ಲಿಯೂ ನಮ್ಮ ಬಾಳಿನಲ್ಲಿ ಇರುವಂತೆಯೇ ಏಳುಬೀಳುಗಳು, ಸಂಪ್ರದಾಯಗಳು, ಅವುಗಳ ವಿರುದ್ಧ ಕ್ರಾಂತಿ… ಇವೆಲ್ಲವೂ ಉಂಟು. ಸಾಹಿತ್ಯ ಆಗಸದಷ್ಟು ವಿಶಾಲ, ಸಾಗರದಷ್ಟು ಆಳವಾದ ಹರವು ಹೊಂದಿದೆ. ವಿಷಯವಸ್ತು, ಶೈಲಿ, ಅಭಿವ್ಯಕ್ತಿಯ ಹಿನ್ನೆಲೆಯಲ್ಲಿ ಸಾಹಿತ್ಯವು ಹತ್ತು ಹಲವಾರು ಪ್ರಕಾರಗಳನ್ನು ಹೊಂದಿದೆ. ಜೀವನ ಬದಲಾದಂತೆ ಸಾಹಿತ್ಯವೂ ಬದಲಾಗುತ್ತದೆ. ಹೊಸದಾದುದು ಕಾಲ ಕಳೆದಂತೆ ಹಳೆಯದೆನಿಸಿಕೊಂಡು ಸಂಪ್ರದಾಯವಾಗಿಬಿಡುತ್ತದೆ. ಅದರ ವಿರುದ್ಧ ಕ್ರಾಂತಿಯಾಗಿ, ದಂಗೆಯಾಗಿ ಹಳೆಯದರ ಸ್ಥಾನಕ್ಕೆ ಹೊಸದು ಬಂದು ನಿಲ್ಲುತ್ತದೆ. ಈ ಹೊಸದು ಕೂಡ ಮುಂದೆ ಮತ್ತೊಂದು ಹೊಸದಕ್ಕೆ ದಾರಿ ಮಾಡಿಕೊಡುತ್ತದೆ. ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೂ- ಚಂಪೂ, ವಚನ, ರಗಳೆ, ಷಟ್ಪದಿ, ಸಾಂಗತ್ಯ…. ಮುಂತಾದ ಅನೇಕ ರೀತಿಗಳ ಮೂಲಕ ಸಾಹಿತ್ಯ ಬೆಳೆದು ಬಂದಿದೆ. “ಒಂದು ನಿರ್ದಿಷ್ಟ ಸಾಹಿತ್ಯ ಪರಂಪರೆಯು ತನ್ನ ಸಾಧ್ಯತೆಗಳನ್ನು ತೀರಿಸಿಕೊಂಡು ಜಡವಾಗುವ ಹೊತ್ತಿಗೆ ಇನ್ನೊಂದು ಸಾಹಿತ್ಯ ಪರಂಪರೆಯ ಉಗಮಕ್ಕೆ ಕಾರಣವಾದ ಅಂಶಗಳನ್ನು ತನ್ನ ಒಡಲಲ್ಲಿ ಧರಿಸಿಕೊಂಡಿರುತ್ತದೆ” (ಶ್ರೀಧರ್ ಹೆಗಡೆ ಭದ್ರನ್ (ಸಂ) ; ಸಾಹಿತ್ಯ ಚಳುವಳಿಗಳು; ಪು- ೪೩) ಎಂಬ ಪುರುಷೋತ್ತಮ ಬಿಳಿಮಲೆಯವರ ಮಾತು ಸಾಹಿತ್ಯದ ಎಲ್ಲ ಪ್ರಕಾರಗಳಿಗೂ, ಎಲ್ಲ ಘಟ್ಘಗಳಿಗೂ ಅನ್ವಯಿಸುತ್ತದೆ. ಈ ಸಾಹಿತ್ಯಕ್ಕೆ ಭಾಷೆಯ, ಗಡಿಯ ಹಂಗು ಇಲ್ಲ. ಇದೊಂದು ‘ಸರ್ವಾಂತರ್ಯಾಮಿ’. ಇದಕ್ಕೊಂದು ಉತ್ತಮ ಉದಾಹರಣೆಯೆಂದರೆ ‘ಗಜಲ್’. ಈ ಗಜಲ್ ನಷ್ಟು ವಿಶ್ವವ್ಯಾಪಿಯಾದ ಸಾಹಿತ್ಯದ ಮತ್ತೊಂದು ಪ್ರಕಾರವನ್ನು ಜಗತ್ತಿನ ಮತ್ಯಾವುದೇ ಸಾಹಿತ್ಯದಲ್ಲಿಯೂ ಕಾಣಲಾಗದು..! ಇದು ಅರೆಬಿಕ್, ಫಾರಸಿ ಮತ್ತು ಭಾರತೀಯ ಸಂಸ್ಕೃತಿಗಳ ಹದವಾದ ಮಿಶ್ರಣವಾಗಿದೆ. ‘ಗಜಲ್’ ಉರ್ದು ಕಾವ್ಯದ ಅತ್ಯಂತ ಜನಪ್ರಿಯ ಹಾಗೂ ಗಂಭೀರ ಸಾಹಿತ್ಯ ರೂಪ. ಇದನ್ನು ಉರ್ದು ಕಾವ್ಯದ ರಾಣಿ ಎಂದು ಕರೆಯುತ್ತಾರೆ. “ಗಜಲ್ ಉರ್ದು ಕಾವ್ಯದ ಕೆನೆ; ಘನತೆ, ಗೌರವ, ಪ್ರತಿಷ್ಠೆಗಳ ಪ್ರತೀಕ. ಗಜಲ್ ಪ್ರೇಮ ಸಾಮ್ರಾಜ್ಞಿ, ರಸಜಲಧಿ, ಬದುಕಿನ ರುಚಿ ಮತ್ತು ಬಟ್ಟೆ; ಆತ್ಮಾನಂದದ ತಂಬೆಳಕು” ಎಂದಿದ್ದಾರೆ ಶಾಂತರಸರು. (ಗಜಲ್ ಮತ್ತು ಬಿಡಿ ದ್ವಿಪದಿ : ಪು- ೪೩) ಗಜಲ್ ಅತ್ಯುತ್ತಮವೂ ಸುಖತಮವೂ ಆದ ಮನಸ್ಸಿನ ಸೌಂದರ್ಯಯೋಗಿ. ಜೀವಮಾನದ ಸುಖತಮವಾದ ಅತ್ಯುತ್ತಮ ಮುಹೂರ್ತಗಳಲ್ಲಿ ಹಾಡುವ ಆತ್ಮ ಗೀತಾಂಜಲಿಯಾಗಿದೆ. ನಮ್ಮ ಹೃದಯವನ್ನು ವಿಕಸಿತವಾಗುವಂತೆ ಮಾಡಿ ಜಗತ್ತನ್ನು ನಮಗೆ ಒಲಿಸುತ್ತದೆ. ಅದರ ದಿವ್ಯ ಸ್ಪರ್ಶದಿಂದ ಸರ್ವವೂ ಮನೋಹರವಾಗಿ ಪರಿಣಮಿಸುತ್ತದೆ. ಮಿಂಚಿ ಮಾಯವಾಗುವ ಪರಮಾನಂದವನ್ನು ಅವಿಚ್ಛಿನ್ನವಾಗುವಂತೆ ಮಾಡುತ್ತದೆ. ಫಾರಸಿ ಮೂಲದಿಂದ ಹರಿದು ಬಂದ ಈ ಗಜಲ್ ಗಂಗೋತ್ರಿ ಭಾರತೀಯ ಭಾಷೆಗಳಲ್ಲಿ ಉರ್ದು, ಸಿಂಧಿ, ಗುಜರಾತಿ, ಪಂಜಾಬಿ, ಹಿಂದಿ, ಮರಾಠಿ, ಕನ್ನಡ ಹಾಗೂ ಇನ್ನಿತರ ಭಾಷೆಗಳಲ್ಲಿಯೂ ಸಮೃದ್ಧ ಕಾವ್ಯ ಕೃಷಿಗೆ ಕಾರಣವಾಗಿದೆ. ಇದು ತನ್ನದೇ ಆದ ಲಯ, ನಿಯಮ ಹಾಗೂ ಲಕ್ಷಣಗಳನ್ನು ಹೊಂದಿದೆ. ಇದರ ಕುರಿತು ಶಾಂತರಸ, ಜಂಬಣ್ಣ ಅಮರಚಿಂತ, ಸಿದ್ದರಾಮ ಹಿರೇಮಠ, ಚಿದಾನಂದ ಸಾಲಿ, ಗಿರೀಶ್ ಜಕಾಪುರೆ, ಶ್ರೀದೇವಿ ಕೆರೆಮನೆ, ಅಲ್ಲಗಿರಿರಾಜ…. ಮುಂತಾದ ಗಜಲ್ ಗಾರುಡಿಗರು ಅನುಷಂಗಿಕವಾಗಿ ಚರ್ಚಿಸಿದ್ದರಾದರೂ ‘ಸಮಗ್ರ ಆಕರ ಗ್ರಂಥ’ ದ ಕೊರತೆ ನವ ಉತ್ಸಾಹಿ ‘ಗಜಲ್ ಗೋ’ ರವರನ್ನು ಕಾಡುತ್ತಿದೆ. ಅಂತೆಯೇ ಇಂದು ‘ಗಜಲ್ ಗೋಯಿ’ ತುಂಬಾ ಸವಾಲಿನಿಂದ ಕೂಡಿದೆ. “ಗಜಲ್ ಸಹಜವಾಗಿ ಒಲಿಯುವುದಿಲ್ಲ. ಮನಬಂದಂತೆ ಬರೆಯಲು ಇದು ಮುಕ್ತ ಛಂದವೂ ಅಲ್ಲ. ಇಲ್ಲಿ ನಿಯೋಜಿತವಾದ ಛಂದಸ್ಸು ಇದೆ. ಹಲವಾರು ಪ್ರಕಾರದ ವೃತ್ತಗಳು ಇವೆ. ಅವು ಯಾವುದನ್ನು ನಾವು ಕನ್ನಡದವರು ಗಮನಿಸುತ್ತಿಲ್ಲ” ( ಶ್ರೀಮತಿ ಪ್ರಭಾವತಿ ಎಸ್. ದೆಸಾಯಿ : ಭಾವಗಂಧಿ: ಪು- ೧೨) ಎಂದು ಗಿರೀಶ್ ಜಕಾಪುರೆಯವರು ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾರಸ್ವತ ಲೋಕದಲ್ಲಿ ಇಂದು ಗಜಲ್ ಪರಂಪರೆ ಹುಲುಸಾಗಿ ಬೆಳೆಯುತ್ತಿದೆಯಾದರೂ ಛಂದೋ ನಿಯಮವನ್ನು ಪಾಲಿಸದೆ ಇರುವುದು ಆತಂಕದ ಜೊತೆಗೆ ವಿಷಾದವನ್ನು ಮೂಡಿಸುತ್ತಿದೆ. ಈ ಬಗ್ಗೆ ಕವಿ ಮಜಹರ್ ಇಮಾಮ್ ಅವರ ಒಂದು ಷೇರ್ ಅನ್ನು ಇಲ್ಲಿ ಗಮನಿಸಬಹುದು. “ಕಹನೆ ಕೊ ಯೆ ಗಜಲ್ ಹೈ, ಕ್ಯಾ ಗಜಲ್ ಹೈ ಜಿಸೆ ನಜ್ಮ್ ಕಹಾ ನ ಜಾಯೆ, ನ ತರಾನಾ ಕಹಾ ಜಾಯೆ” ಇದರಲ್ಲಿ ಅವರು ಗಜಲ್ ಹೆಸರಿನಲ್ಲಿ ಬರುತ್ತಿರುವ ಗಜಲ್ ಅಲ್ಲದ ಕಾವ್ಯದ ಬಗ್ಗೆ ಬರೆಯುತ್ತ ಇಂತಹ ರಚನಾ ವಿಧಾನವನ್ನು ಖಂಡಿಸಿದ್ದಾರೆ. ‘ಗಜಲ್’ ಎಂದರೆ ಒಂದು ಅರ್ಥ ನಲ್ಲೆಯೊಂದಿಗೆ ಸಂವಾದ, ಮತ್ತೊಂದು ಅರ್ಥ ಸಿಕ್ಕಿಬಿದ್ದ ಜಿಂಕೆಯ ಆಕ್ರಂದನ. ಈ ಎರಡೂ ಅರ್ಥಗಳ ಭಾವನಾ ವಿಶೇಷಗಳೂ ಗಜಲ್ ಪ್ರಕಾರದೊಳಗೆ ಆಳವಾಗಿ ಬೇರೂರಿವೆ. ಈ ಕಾರಣಕ್ಕಾಗಿಯೇ “ಗಜಲ್ ಎಂದರೆ ಪ್ರೇಮಗೀತೆ ಮಾತ್ರ ಎಂಬ ತಪ್ಪು ಕಲ್ಪನೆ ವ್ಯಾಪಕವಾಗಿ ಹರಡಿರುವುದು” (ಡಿ. ಆರ್. ನಾಗರಾಜ್ (ಸಂ) ; ಉರ್ದು ಸಾಹಿತ್ಯ ; ಪು- XXVI) ಎಂಬ ಡಿ. ಆರ್. ನಾಗರಾಜ್ ರವರ ಮಾತು ಉಲ್ಲೇಖನೀಯ. ಪ್ರೇಮ ಎನ್ನುವುದು ಒಂದು ಭಾಷೆ, ಒಂದು ನಿರ್ದಿಷ್ಟ ಮನಸ್ಥಿತಿ. ಅಲ್ಲಿ ಎಲ್ಲ ವಸ್ತುಗಳು, ತಾತ್ವಿಕ ಸಂಗತಿಗಳು, ಅನುಭವಗಳು ಶೋಧನೆಗೆ ಒಳಗಾಗುತ್ತವೆ. ಈ ಹಿನ್ನೆಲೆಯಲ್ಲಿ “ಜಗದಲ್ಲಿರುವುದು ವಿರಹದ ನೋವೊಂದೆ ಅಲ್ಲ, ಇನ್ನೆಷ್ಟೋ ನೋವುಗಳಿವೆ” ಎಂಬ ಫೈಜ್ ಅಹ್ಮದ್ ಫೈಜ್ ರವರ ಹೇಳಿಕೆ ಮಹತ್ವವನ್ನು ಪಡೆದುಕೊಳ್ಳುತ್ತದೆ. ಮಿರ್ಜಾ ಗಾಲಿಬ್ ಉರ್ದು ಗಜಲ್ ಪರಂಪರೆಯ ಹೆಮ್ಮೆಯ ವಾರಸುದಾರರು. ಗಾಲಿಬ್ ನ ಉರ್ದು ‘ದಿವಾನ್’ ದಲ್ಲಿ ಹತ್ತು ಹಲವು ವೈವಿಧ್ಯಮಯ ವಿಷಯಗಳ ಸಂಗಮವಿದೆ. ಅವುಗಳಲ್ಲಿ ಕೆಲವೊಂದು ಉದಾಹರಣೆಗಾಗಿ… “ಸಮಸ್ತ ವಿಶ್ವದ ವಸ್ತುಕೋಟಿಯಲಿ ನೀನಿಲ್ಲದೆ ಇಲ್ಲಾ ಅದರೂ ಒಂದು ವಸ್ತುವು ನಿನಗೆ ಸಮ-ಸಾಟಿಯೆ ಅಲ್ಲಾ” “ನನ್ನ ದೃಷ್ಟಿಯಲ್ಲಿ ಜಗವೆಂಬುದು ಮಕ್ಕಳ ಚೆಲ್ಲಾಟ ನನ್ನ ಎದುರಿನಲಿ ಹಗಲೂ ಇರುಳೂ ನಡೆಯುವ ನಗೆಯಾಟ” “ಕಾಯಿಲೆ ಬಿದ್ದರೆ ನೋಡಿಕೊಳ್ಳಲಿಕ್ಕೆ ಯಾರೂ ಬೇಡ ನನ್ನ ಬಳಿ ಕೊನೆಯುಸಿರೆಳೆದರೆ ಅತ್ತು ಕರೆಯಲಿಕೆ ಯಾರೂ ಇರದಿರಲಿ” “ಬದುಕಿನ ತಳಹದಿಯಲ್ಲಿಯೆ ಅವಿತಿವೆ ನಾಶದ ಬೀಜಗಳು ರೈತನ ಬೆವರೇ ಸಿಡಿಲಾಗುತ ಬೆಳೆ ಸುಡುವುದು ಸುಗ್ಗಿಯೊಳು” ಗಜಲ್ ಮಾನವ ಪ್ರೇರಿತ, ನಿಸರ್ಗದ ಆಧಾರಿತ ಎಲ್ಲ ವಿಷಯಗಳನ್ನು ತನ್ನ ಮಡಿಲಲ್ಲಿಕೊಟ್ಟುಕೊಂಡು ಕಾವು ಕೊಡುತಿದೆ. ಯಾವ ವಿಷಯವೇಯಾದರೂ ಹೇಳುವ ರೀತಿ ಮಾತ್ರ ಕೋಮಲ ಹಾಗೂ ಹೃದಯ ತಟ್ಟುವಂತೆ ಇರಬೇಕು.ಆದರೆ ಹಿರಿಯ ತಲೆಗಳು ಮಾತ್ರ ಗಜಲ್ ಎಂದರೆ ಪ್ರೀತಿ, ಪ್ರೇಮ, ಪ್ರಣಯ, ವಿರಹ, ಭಕ್ತಿ, ಅಧ್ಯಾತ್ಮ… ಕುರಿತು ಬರೆಯಬೇಕು ಎನ್ನುತ್ತಾರೆ. ‘ರದೀಫ್’ ಗಜಲ್ ಗೆ ಗೇಯತೆಯನ್ನು ನೀಡುತ್ತದೆ. ಲಾಲಿತ್ಯ ಹೆಚ್ಚಿದಷ್ಟು ಭಾವ ತೀವ್ರತೆ ಉದಯಿಸಿ ಸಂಗೀತದ ಲೋಕಕ್ಕೆ ನಮ್ಮನ್ನು ಕರೆದೊಯ್ಯುತ್ತದೆ. ಆದರೆ ಅದರ ಬಳಕೆ ಮಾತ್ರ ಔಚಿತ್ಯದಿಂದ ಕೂಡಿರಬೇಕು. ಅದು ಅನಗತ್ಯವಾಗಿರದೆ ಇಡೀ ಗಜಲ್ ಗೆ ಮೆರುಗು ನೀಡುವಂತಿರಬೇಕು. ಆದರೆ ಗಜಲ್ ಗಳಲ್ಲಿ ರದೀಫ್ ಗಳ ಆಯ್ಕೆಯ ಬಗ್ಗೆಯೇ ಸಾಕಷ್ಟು ಗೊಂದಲಗಳಿವೆ. ರದೀಫ್ ಗಳು ಸಹೃದಯ ಓದುಗರನ್ನು ಯೋಚನೆಗೆ ಹಚ್ಚುವಂತಿರಬೇಕು. ಸಖಿ, ಸಖಾ, ಗೆಳೆಯ, ಗೆಳತಿ, ಮಿತ್ರ, ಸಾಕಿ, ಗಾಲಿಬ್, ನಾವು, ನೀವು… ಇಂತಹ ರದೀಫ್ ಗಳನ್ನು ಹೇರಳವಾಗಿ ಬಳಸಲಾಗುತ್ತಿದೆ. ಇದರಿಂದ ಕೆಲವೊಮ್ಮೆ ಗಜಲ್ ನ ಧ್ವನಿಯ ರಸಭಂಗವಾಗುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ..! ರದೀಫ್ ನ ಬಳಕೆ ಪ್ರತಿ ಗಜಲ್ ನಲ್ಲಿಯೂ ಭಿನ್ನವಾಗಿರಬೇಕು. ಇಲ್ಲದಿದ್ದರೆ ಅದು ಕೇವಲ ‘ಏಕತಾನತೆ’ಯನ್ನು ಉಂಟು ಮಾಡುತ್ತದೆಯಷ್ಟೇ..! ರದೀಫ್… ಇಡೀ ಗಜಲ್ ಗೆ ದಿಕ್ಸೂಚಿಯಾಗಿ ಕೆಲಸ ಮಾಡುತ್ತದೆ. ಯಾವ ರದೀಫ್ ಕೂಡ ಒತ್ತಾಯಪೂರ್ವಕವಾಗಿ ಬರಬಾರದು, ಉಸಿರಿನಂತೆ ಸರಳವಾಗಿ, ಸುಲಲಿತವಾಗಿ ಬರಬೇಕು ; ಬರದೇ ಇದ್ದರೂ ನಡೆದೀತು! ಏಕೆಂದರೆ ಗಜಲ್ ಗೆ ರದೀಫ್ ಅನಿವಾರ್ಯವಲ್ಲ, ಅವಶ್ಯಕತೆಯಷ್ಟೆ. ಇದನ್ನು ಗಜಲ್ ಛಂದಶಾಸ್ತ್ರಜ್ಞರಾದ ಅಲ್ಲಾಮ ಅಖ್ಲಾಕ್ ದೆಹಲವಿಯವರು ತಮ್ಮ ‘ಘನ ಶಾಯರಿ’ ಕೃತಿಯಲ್ಲಿ ರದೀಫ್ ಕುರಿತು ಹೀಗೆ ಹೇಳಿದ್ದಾರೆ. “ರದೀಫ್ ಇಲ್ಲದಿದ್ದರೂ ನಡೆದೀತು, ಕಾಫಿಯಾ ಇಲ್ಲದಿದ್ದರೆ ಅದು ಗಜಲ್ ಆಗುವುದಿಲ್ಲ”. ಇದೇ ಅರ್ಥದ ಮಾತುಗಳನ್ನು ಮಮ್ತಾಜ್ ಉರ್ರಷಿದ್ ರವರು ತಮ್ಮ ‘ಇಲ್ಮ್ ಕಾಫಿಯಾ’ ಪುಸ್ತಕದಲ್ಲಿ ಹೇಳಿದ್ದಾರೆ. ಇದು ‘ಕವಾಫಿ’ ಯ ಮಹತ್ವ, ಅನಿವಾರ್ಯತೆಯನ್ನು ಸಾರುತ್ತದೆ. ಗಜಲ್ ಗೋ ರದೀಫ್ ಬಳಸುವುದಕ್ಕಿಂತ ಮುಂಚೆ ಅದರ ಪ್ರಕಾರ, ಅದರ ಅರ್ಥ, ಸಾಧ್ಯತೆಗಳನ್ನು ಅರಿಯುವ ಪ್ರಯತ್ನ ಮಾಡಬೇಕು. ರದೀಫ್ ನಲ್ಲಿ ಚೋಟಿ ರದೀಫ್, ಮಜಲಿ ರದೀಫ್ ಹಾಗೂ ಲಂಬಿ ರದೀಫ್ ಎಂಬ ಮೂರು ಪ್ರಕಾರಗಳಿವೆ. ರದೀಫ್ ಇಲ್ಲದೆ ಗಜಲ್ ಗಳ ಸೃಷ್ಟಿಕಾರ್ಯ ನಡೆದಿದೆ. ಫಿರಾಖ್ ಮತ್ತು ಅಲ್ಲಮಾ ಇಕ್ಬಾಲ್ ರಂತಹ ಮಹಾಕವಿಗಳು ರದೀಫ್ ರಹಿತ ಗಜಲ್ ಗಳನ್ನು ರಚಿಸಿದ್ದಾರೆ. ಇದಕ್ಕೆ ಗೈರ್ ಮುರದ್ದಫ್ ಗಜಲ್/ಕಾಫಿಯಾನ ಗಜಲ್ ಎಂದು ಕರೆಯುತ್ತಾರೆ. ಕಾಫಿಯಾ.. ಗಜಲ್ ನ ಜೀವಾಳ. ಇದು ಕನ್ನಡ ಕಾವ್ಯಗಳಲ್ಲಿ ಬರುವಂತಹ ‘ಪ್ರಾಸ’ ಅಲ್ಲ. ಇದೊಂದು ಸಾಮಾನ್ಯ ಅಂತ್ಯ ಪದವಾಗಿರದೆ ಬದಲಾವಣೆ ಬಯಸುವ ಒಳಪ್ರಾಸವಾಗಿದೆ. “ರದೀಫ್ ಇಲ್ಲದೆಯೂ ಗಜಲ್ ರಚನೆ ಸಾಧ್ಯವಿದೆ. ಆದರೆ ಕಾಫಿಯಾ ಇಲ್ಲದೆ ಗಜಲ್ ರಚನೆ ಸಾಧ್ಯವಿಲ್ಲ” (ಗಿರೀಶ್ ಜಕಾಪುರೆ ; ಸಾವಿರ ಕಣ್ಣಿನ ನವಿಲು; ಪು- ೧೮) ಎಂದು ಗಿರೀಶ್ ಜಕಾಪುರೆಯವರು ಹೇಳಿರುವುದು ಗಜಲ್ ಪರಂಪರೆಯನ್ನು ಪ್ರತಿನಿಧಿಸುತ್ತದೆ. ಹಾಗಂತ ‘ಕಾಫಿಯಾ’ ಅನಾವಶ್ಯಕವಾಗಿ, ಪ್ರಾಸದ ನೆಪದಲ್ಲಿ ಬಳಕೆಯಾಗಬಾರದು. ಅದೊಂದು ಸುಂದರ ಸ್ವತಂತ್ರ ಪದ, ಶಬ್ಬವಾಗಿರಬೇಕು. ಕಾಫಿಯಾದ ಕೊನೆಯ ಅಕ್ಷರ ‘ರವಿ’ ಮಾತ್ರ ಇಲ್ಲಿ ಮುಖ್ಯವಾಗುವುದಿಲ್ಲ, ಅದರೊಂದಿಗೆ ಕಾಫಿಯಾದ ಹಲವು ಪ್ರಕಾರಗಳೂ ಮುಖ್ಯವಾಗುತ್ತವೆ. ಏಕ ಅಲಾಮತ್, ಬಹು ಅಲಾಮತ್, ರೌಫ್, ಕೈದ್, ತಶೀಶ್…. ಮುಂತಾದವುಗಳ ಪರಿಚಯ ಅಗತ್ಯವೆನಿಸುತ್ತದೆ. ಇದುವೆ, ಅದುವೆ… ಇವುಗಳು ಕಾಫಿಯಾ ಆಗುವುದಿಲ್ಲ. ಸೂರ್ಯನೆ, ಅವನೆ, ನೀನೆ, ಏನೆ… ಇವುಗಳೂ ಕವಾಫಿ ಅಲ್ಲ. ಕೇವಲ ‘ರವಿ/ರವೀಶ್’ ನ ಅನುಕರಣೆಯಿಂದ ಕಾಫಿಯಾ ಪರಿಫೂರ್ಣವಾಗುವುದಿಲ್ಲ. ಪ್ರತಿ ‘ಕವಾಫಿ’ ಯಲ್ಲಿ ಅರ್ಥ ಹೊಂದಾಣಿಕೆಯ ಜೊತೆಗೆ ವಚನ, ಕಾಲ, ಲಿಂಗ, ಪ್ರತ್ಯಯಗಳಲ್ಲಿಯೂ ಹೊಂದಾಣಿಕೆ ಇರಬೇಕು, ಇರಲೆಬೇಕು. ಆದರೆ ಹೆಚ್ಚಿನ ಗಜಲ್ ಗಳು ‘ಕವಾಫಿ’ಗೆ ಅವಮಾನ ಮಾಡುತ್ತಿರುವಂತೆ ಭಾಸವಾಗುತ್ತದೆ. ಇದರಿಂದಾಗಿಯೇ ಗಜಲ್ ಗಳು ಹೃದ್ಯವೆನಿಸದೆ ಕೇವಲ ಸಂಖ್ಯೆಯ ಸೌಧಗಳಾಗುತ್ತಿವೆ…!! ಗಜಲ್ ನ ಪ್ರತಿಯೊಂದು ‘ಷೇರ್’ ಗಜಲ್ ನ ಪ್ರತ್ಯೇಕ ಒಂದು ಅಂಗವಿದ್ದಂತೆ. ಅದು
ಗಜಲ್ ಸಾಹಿತ್ಯ ಮತ್ತು ಸವಾಲುಗಳು Read Post »
You cannot copy content of this page