ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಪ್ರೇಮಪತ್ರ ಸ್ಪರ್ದೆ

ಪ್ರೇಮಪತ್ರ ಸ್ಪರ್ದೆ ಪಂಜು ಅಂತರ್ಜಾಲ ವಾರಪತ್ರಿಕೆ ವತಿಯಿಂದ 2021 ರ ಪ್ರೇಮ ಪತ್ರ ಸ್ಪರ್ಧೆಗೆ ನಿಮ್ಮ ಪ್ರೇಮ ಪತ್ರಗಳನ್ನು ಆಹ್ವಾನಿಸಲಾಗಿದೆ. ನಿಯಮಗಳು: ಪ್ರೇಮ ಪತ್ರ ನಿಮ್ಮ ಸ್ವಂತ ಬರಹವಾಗಿರಬೇಕುಕನಿಷ್ಟ 500 ಪದಗಳ ಬರಹವಾಗಿರಬೇಕುಫೇಸ್ ಬುಕ್ ಮತ್ತು‌ ಬ್ಲಾಗ್ ಸೇರಿದಂತೆ ಬೇರೆಲ್ಲೂ ಪ್ರಕಟವಾಗಿರಬಾರದು.ನಿಮ್ಮ ಬರಹವನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಪ್ರೇಮ ಪತ್ರ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ. ಮಿಂಚಂಚೆಯಲ್ಲಿ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ನಿಮ್ಮ ಕಿರು ಪರಿಚಯ ಹಾಗು ಫೇಸ್ ಬುಕ್ ಲಿಂಕ್ ಕಳುಹಿಸಿ.. ಬರಹಗಳು ತಲುಪಬೇಕಾದ ಕೊನೆಯ ದಿನಾಂಕ: 10.02.2021 ಬಹುಮಾನಗಳು: ಮೊದಲ ಬಹುಮಾನ: 3000 ರೂಪಾಯಿ ಎರಡನೇ ಬಹುಮಾನ: 2000 ರೂಪಾಯಿ ಮೂರನೇ ಬಹುಮಾನ: 1000 ರೂಪಾಯಿ ಹಾಗು ತೀರ್ಪುಗಾರರ ಮೆಚ್ಚುಗೆ ಪಡೆದ ಐವರಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು. ಈ ಪತ್ರಗಳನ್ನು ಪಂಜುವಿನಲ್ಲಿ ಪ್ರಕಟಣೆಗೆ ಬಳಸಿಕೊಳ್ಳುವ ಹಕ್ಕು ‘ಪಂಜು’ಗೆ ಇರುತ್ತದೆ. ***********************************************************************

ಪ್ರೇಮಪತ್ರ ಸ್ಪರ್ದೆ Read Post »

ಇತರೆ, ವರ್ತಮಾನ

ಹೀಗೊಂದು ಚಿಂತನೆ.

ಚಿಂತನೆ ಹೀಗೊಂದು ಚಿಂತನೆ. ಗೋನವಾರ ಕಿಶನ್ ರಾವ್ “What is wonderful about great literature is that it transforms the man who reads it towards the condition of the man who wrote, and brings to birth in us also the creative impulse. ~E.M. Forster“ ಬೆಳಗಾಗೆದ್ದು ಕೈಯಲ್ಲಿ ಕಾಫಿ ಕಪ್ಪು ಹಿಡಿದು, ಅಂದಿನ ದಿನ ಪತ್ರಿಕೆ, ತಿರುವಿ ಹಾಕುತ್ತಿದ್ದೇವೆ ಎಂದು ಭಾವಿಸಿಕೊಳ್ಳಿ. ಪುಟ ತಿರುವುತ್ತ ಹೋಗುತ್ತೀದ್ದೀರಿ,ಅಲ್ಲೊಂದು ಕೊಲೆ,ಇಲ್ಲೊಂದು ಸಾವು,ಮಗದೊಂದು ಪುಟದಲ್ಲಿ ಅಪಘಾತ. ಎಲ್ಲದಕ್ಕೂ ನಿರ್ಲಿಪ್ತ ಭಾವ.ಪತ್ರಿಕೆ ಪಕ್ಕಕ್ಕಿಟ್ಟು ಮೊಬೈಲ್ ಕೈಗೆತ್ತಿಗೊಳ್ಳುವಿರಿ ಸಾಮಾಜಿಕ ಜಾಲತಾಣದಲ್ಲಿ ಒಂದು ಸಂದೇಶ. ಶ್ರೀ……….. ಯವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.ಅನೇಕರ ಮರು ಸಂದೇಶಗಳು.ನೀವು ಸಹ ಒಂದು ಓಂ ಶಾಂತಿ ಎಂದು ಟಂಕಿಸಿ ಮುಂದೆ ಸಾಗುವಿರಿ.ಅಲ್ಲಿಯೂ ನಿರ್ಲಿಪ್ತ ಮನೋಭಾವ ! ಯೋಚಿಸಿ ನೋಡಿ. ಒಂದು ಸಾವಿನ ಸುದ್ದಿ ಮೂರು ವಿಧದ ಪರಿಣಾಮ ಬೀರುತ್ತದೆ ಅಲ್ಲವೆ ? ಸದರಿ ಶ್ರೀ ಯವರ ನಿಧನಕ್ಕೆ ನೇರ ಪರಿಣಾಮ ಹೊಂದಿದವರು ಅವರ ಹತ್ತಿರದ ದೂರದ ಸಂಬಂಧಿಕರು.ಎರಡನೆಯವರು ಆಪ್ತವಲಯ.ಅವರು ಸಾಧ್ಯವಾದರೆ, ದಹನ ಕಾರ್ಯದಲ್ಲಿ ಭಾಗಿಗಳಾಗುವರು. ಅನಾನುಕೂಲ, ಅನಾರೋಗ್ಯದಂತಹ ಬಲವಾದ ಕಾರಣಗಳಿದ್ದರೆ,ದೂರವಾಣಿಗಳ ಮುಖಾಂತರ ಸಂಪರ್ಕಿಸಿ ಸಂತಾಪ ಸೂಚಿಸುವರು.ಈ ಮೂರರನ್ನು ಮೀರಿದವರಿರುತ್ತಾರೆ.ಏನೂ, ಸಂಬಂಧ​ವಿಲ್ಲದವರು. ಪ್ರಪಂಚದ ಒಳಿತು-ಕೆಡುಕುಗಳ ಗೋಜು ಅವರಿಗೆ ಬೇಕಿಲ್ಲ.ತಮ್ಮ ಪಾಡಿಗೆ ತಾವು ಒಂದು ಗುಡ್ ಮಾರ್ನಿಂಗ್, ಗುಡ್ ಇವನಿಂಗ್ ಸಂದೇಶ ಹಾಕುತ್ತ ಹೋಗುತ್ತಿರುತ್ತಾರೆ.ವಿಚಿತ್ರ ಅಲ್ಲವೇ ಯಾಕೆ ಹೀಗೆ ? ಶ್ರೀ ಯವರ ಹೃದಯಾಘಾತದಿಂದ ದಿಂದ ಅವರ ಸಂಬಂಧಿಕರಿಗೆ ಮಾತ್ರ ಕೆಟ್ಟ ಸುದ್ದಿ. ಉಳಿದ ಕೆಲವರಿಗೆ ಅದು ಸುದ್ದಿಯೇ ಅಲ್ಲ.ನಗರದ ಯಾವುದೇ ವಿಸ್ತರಣೆಯಲ್ಲಿ ಉಂಟಾದ ಸಾವಿನ ಸುದ್ದಿ ನಮ್ಮಲ್ಲಿ ಅನೇಕರನ್ನು ನಿರ್ಭಾವುಕರನ್ನಾಗಿ ಮಾಡಬಲ್ಲದು. ಮನಸ್ಸಿಗೆ ಆಪ್ತವಾದ ಕೃತಿಗಳನ್ನು ಕುರಿತು ಯೋಚಿಸುವಾಗ, ಉದಾಹರಣೆಗೆ ಮಹಾಭಾರತ,ರಾಮಾಯಣ ಕಾವ್ಯಗಳಲ್ಲಿ, ಕುಂತಿ ಬೀರಿದ ಪ್ರಭಾವ ಮಾದ್ರಿ ಬೀರಲಿಲ್ಲ. ಸೀತೆ, ದ್ರೌಪದಿ, ಪ್ರಾಮುಖ್ಯರಾದಷ್ಟು ಊರ್ಮಿಳೆ, ಮಾಂಡವಿ,ಶೃತಕೀರ್ತಿ ಆಗಿಯೇ ಇಲ್ಲ. ಊರ್ಮಿಳೆಯ ಹೆಸರು ಅಲ್ಲಿ ಇಲ್ಲಿ ಒಂದಷ್ಟು ಚರ್ಚಿತವಾಗಿದ್ದರೆ, ಮಾಂಡವಿ ಶೃತಕೀರ್ತಿ ಹೆಸರು ಬಹಳಷ್ಟು ಜನ ಕೇಳಿಯೂ ಇರಲಿಕ್ಕಿಲ್ಲ. ಅಭಿಮನ್ಯುವಿನ ಸಾವಿನಷ್ಟು ಘಟೋತ್ಕಚನ ಸಾವು ಕಾಡಿಲ್ಲ. ಉಪಕಾರ್ ಚಿತ್ರದ ನಾಯಕ ಮನೋಜ ಕುಮಾರನ ಮೇಲೆ ತೋರಿದ ಪ್ರೀತಿ ಅನುಕಂಪ ನಮ್ಮ ಊರಿನ ರೈತನ ಮೇಲೆ ತೋರಿದ್ದೇವೆಯೇ ? ಉಹೂಂ! ಸಂದೇಹಗಳ ಸರ ಮಾಲೆ !! ಬೇಂದ್ರೆಯವರ ಕವಿತೆ ‘ರಾಮಾಯಣ’ದ ಈ ಸಾಲುಗಳನ್ನು ನೋಡಿ. ಲಕ್ಷ್ಮಣನಿಗೆ ವನವಾಸವು,ಉರ್ಮಿಳೆ ಕುರುಡುಗಳೆದ ಕ್ಷಣಕ್ಷಣಾ | ಬರಲಿಲ್ಲವು ಲೆಕ್ಕಕ್ಕೆ ವರುಷಗಳು ಹದಿನಾಲ್ಕು ಭಣಭಣಾ| ಭರತನು ಕಣ್ಣಿಗೆ ಕಾಣುವ ಅಳತೆಯೊಳಿದ್ದನು ತಾ ದಿನದಿನಾ| ತಪವು ಭರತಗೂ ಮಾಂಡವಿಗೂ ತಪ, ವಿರಹವೇ ಪಾರಾಯಣಾ | ಶತೃಘ್ನನು ಅರಮನೆಯೊಳಗಿದ್ದರೂ ಶೃತಕೀರ್ತಿಗೂ ರಣರಣಾ | ರಾಮನ ವಿರಹವು ಸೀತಾವಿರಹವು ತುಂಬಿದೆ ರಾಮಾಯಣಾ || ಸಣ್ಣವರತ್ತರೆ ಎಣಿಕೆಗೆ ಬಾರದು ಅಯ್ಯೋ ನಾರಾಯಣಾ || ಸಾಹಿತ್ಯ ಸಂಜೀವಿನಿ ಎಂದರೆ, ಬೇಂದ್ರೆ. ನಮ್ಮೆಲ್ಲರ ಪ್ರತಿ ಸಂದೇಹಗಳಿಗೆ, ಬೇಂದ್ರೆಯವರಲ್ಲಿ ಅವರ ಕವಿತೆಗಳಲ್ಲಿ ಮದ್ದಿದೆ.ಅದು ಬೇಂದ್ರೆ ತಾಕತ್ತು! ಸಾಹಿತ್ಯದ ತಾಕತ್ತು.ನಮ್ಮ ನೋವಿನ ಸಂಗತಿಗಳು ನಮಗೆ ಯಾವಾಗಾದರೂ ಸುಖವಾಗಿ-ಸುಂದರವಾಗಿ ಕಂಡಿವೆಯಾ ? ಅಥವಾ ಅವುಗಳನ್ನು ನಾವು, ಸುಖಿಸಿದ ನೆನಪಿದೆಯೇ ? ಇಲ್ಲವೆಂದಾದಲ್ಲಿ ಭಾರತದ ‘ದ್ರೌಪದಿ’,ರಾಮಾಯಣದ ‘ಸೀತೆ’,ಭಾಗವತದ ‘ಕಯಾದು’ ನಮಗೆ ಯಾಕೆ ಹತ್ತಿರವಾಗುತ್ತಾರೆ. ಈ ಕತೆಗಳು ಸಾಹಿತ್ಯಿಕವಾಗಿ ಸುಂದರ ಎನಿಸಿಕೊಂಡು ಓದಿಸಿಕೊಂಡು ಹೋಗುತ್ತವೆಯೇ ? ಯಾಕಿದ್ದೀತು? ಅದು ಸಾಹಿತ್ಯಕ್ಕಿರುವ ಸಶಕ್ತ ಪದಜಾಲ.ಮತ್ತದರಲ್ಲಿ ಅಡಕವಾಗಿರುವ ಸತ್ಯ.ಸ್ಪಷ್ಟವಾಯಿತಲ್ಲ ! ಒಂದು ಕೃತಿ ಅದು ಗದ್ಯ ಪದ್ಯ ವಿಮರ್ಶೆ ನಾಟಕ ಏನೇ ಆಗಿರಲಿ.ನಮ್ಮನ್ನು ಸೆಳೆಯುವ ಶಕ್ತಿ ಆ ಸತ್ಯಕ್ಕಿದೆ. ಅದೇ ಸಾಹಿತ್ಯದ ಕಾಣ್ಕೆ ಮತ್ತು ಅದರಲ್ಲಿರುವ ನೈಜತೆಗೆ ಹತ್ತಿರವಿರುವ ಪಾತ್ರ, ಪರಿಸರ,ಕಟ್ಟಿಕೊಡುವ ಕಲೆ,ಹಿಡಿದಿಟ್ಟ ಭಾಷೆ. ನೈಜತೆ ಅಥವಾ ನಾವು ಕರೆಯುವ ನಿರ್ಮಲಾಂತಃಕರಣ​ ಮತ್ತು ಅಷ್ಟೇ ಶುದ್ಧ​ವಾದ ಮನಕ್ಕೆ ನೀಡುವ ಪ್ರೀತಿ. ಈ ರೀತಿಯ ಪ್ರೀತಿಗೆ ಸಮಾನವಾದದ್ದು ಏನಾದರೂ ಇದ್ದೀತೆ ?ಖಂಡಿತ ಇರಲಾರದು.ಒಬ್ಬ ಲೇಖಕ ಬರೆಯುತ್ತಿರುವುದು ನೈಜತೆಯಿಂದ ಕೂಡಿಲ್ಲ ಎಂದು ಓದುಗನ ಅರಿವಿಗೆ ಬಂತೆಂದು ತಿಳಿಯಿರಿ ಅದು ನಮ್ಮ ನೆನಪಿನಿಂದ ಮಾಯ. ಅದು ಆ ಕೃತಿಯ ಮತ್ತು ಆ ಲೇಕಖನ ಸೋಲು ಹೌದು. ಒಂದು ಪುಸ್ತಕ ಓದುತ್ತಿದ್ದೇವೆ.ಅದರ ಚೌಕಟ್ಟು, ವಸ್ತು, ಪಾತ್ರಗಳು ನಮ್ಮನ್ನು ವಿಸ್ಮಯ ಲೋಕ​ಕ್ಕೆ ಕೊಂಡೊಯ್ಯುತ್ತ ತನ್ಮಯತೆ ಮೂಡಿಸಿದರೆ ಅ ಪುಸ್ತಕ ಯಶಸ್ಸು ಕಾಣಬಲ್ಲದು. ನಾಲ್ಕು ಜನರ ಬಾಯಲ್ಲಿ ಅದರ ಮಾತು ಬರಬಹುದು ಚರ್ಚೆಗೆ ಒಳಗಾಗಬಹುದು. ವಿಮರ್ಶಕ ಅದನ್ನು ತನ್ನ ಲೇಖನಗಳಲ್ಲಿ ಮಾದರಿ ಪುಸ್ತಕವಾಗಿ ಬಳಸಬಹುದು. ಎಲ್ಲದಕ್ಕೂ ಮೀರಿ ಒಳ್ಳೆಯ ಮಾರುಕಟ್ಟೆ ಪಡೆಯಬಹುದು. ಒಂದು ವೇಳೆ ಅದೇ ಪುಸ್ತಕದ ಪಾತ್ರಗಳ ಮಿತಿಯನ್ನು ದಾಟಿ ಲೇಖಕನೇ ಮಾತಾಡಿದ್ದರೆ ಅಂತಹ ಕೃತಿಗಳು ಅಪಮೌಲ್ಯ ಹೊಂದುತ್ತವೆ. ಇಲ್ಲಿ ಯಾವುದೇ ಒಬ್ಬ ಬರಹಗಾರ/ಕವಿ ಹೇಳುತ್ತಿರುವುದು ಸ್ವ​ಯಂ ಅವನವೇ ಆಗಿರಬೇಕೆ ? ಅವನ ಕಲ್ಪನೆ, ಪ್ರಯತ್ನಗಳಿಗೆ ಬೆಲೆ ಇಲ್ಲವೇ ? ಅದು ಹಾಗಲ್ಲ .   ಅಂತಹ ಕಲ್ಪನೆಯಲ್ಲೂ ಪ್ರಾಮಾಣಿಕತನ​ ಇದ್ದಾಗಲೇ ಸೃಜನಶೀಲತೆ ಗರಿಗೆದರಲು ಸಾಧ್ಯ. ಇಲ್ಲವಾದರೆ, ಅದು ಒಂದು ರೂಪಾಯಿಗೆ ಒಂದು ಆನೆಯ ಕಥೆ ! ಅಷ್ಟೆ !!  ಓದು,ಸಿನೆಮಾ ಧಾರಾವಾಹಿ ಇನ್ನಾವುದೇ ಕಲೆ ಮತ್ತೊಂದು ಏನೇ ಆಗಿರಲಿ ಆನಂದ, ಸಾಮಾನ್ಯ ಜ್ಞಾನ ಅಥವಾ ಏನೋ ಒಂದು ಸಾಹಿತ್ಯಿಕ ಸಂವೇದನೆ ಒದಗಿಸಬೇಕು. ಕಾವ್ಯಕಲೆಯ ಸದ್ಯ ಪ್ರಯೋಜನ ಕವಿ ಸಹೃದಯರಿಬ್ಬರಿಗೂ ಏಕಕಾಲಕ್ಕೆ ಉಂಟಾಗಬೇಕು ಹಾಗಾದಾಗ ಮಾತ್ರವೇ ಸೌಂದರ್ಯದ ಅನುಭೂತಿ ಮತ್ತು ಸಾಹಿತ್ಯದ ಕೊನೆಯ ಮಜಲನ್ನು ತಲುಪಿದ ತೃಪ್ತಿ. ಇವೆಲ್ಲ ಒಂದು ಕೃತಿ/ಲೇಖಕನಿಂದ ಸಿಗದೇ ಹೋದಾಗ, ಅದು ಸಾರಸ್ವತ ವಲಯದಲ್ಲಿ ಕಳೆದು ಹೋಗುತ್ತದೆ. ಒಂದು ಕೃತಿಯಲ್ಲಿರುವ ಒಂದು ಪಾತ್ರ ನಮ್ಮನ್ನು ಚಿಂತನೆಗೆ ಒಳಪಡಿಸುತ್ತದೆ ಅದರಲ್ಲಿ ನಾವೂ ಒಂದು ಪಾತ್ರವಾಗಿ ಹೋಗುತ್ತೇವೆ. ಯಾವುದೋ ದೃಶ್ಯ/ಪ್ಯಾರಾ ನಮ್ಮ ಕಣ್ಣನ್ನು ಹನಿಗೂಡಿಸುವ ತಾಕತ್ತು ಹೊಂದಿರುತ್ತದೆ.ಜೀವಂತವಿರುವ ಮತ್ತು ಸನಿಹದ ಸಂಪರ್ಕ ಇರುವ ಸ್ನೇಹಿತನಿಗಿಂತ, ಕಾರಂತರ ಚೋಮ, ಅನಂತಮೂರ್ತಿಯವರ ಪ್ರಾಣೇಶಾಚಾರ್, ತ್ರಿವೇಣಿ ಯವರ ಕಾವೇರಿ ನಮಗೆ ಬಹಳ ಹತ್ತಿರವಾಗುತ್ತಾರೆ.ಇದು ಹೇಗೆ ?ಒಂದು ಅನಿಸಿಕೆಯ ಪ್ರಕಾರ ನಮ್ಮ ಮನಸ್ಸು ಇದಕ್ಕೆ ಕಾರಣ.ಕಾಲ್ಪನಿಕ ಪಾತ್ರಗಳು,ನಮ್ಮೊಂದಿಗೆ, ಯಾವುದೇ ರೀತಿಯ ಪೈಪೋಟಿಗೆ ಇಳಿಯಲಾರವು ಎನ್ನುವ ಧೈರ್ಯ.ಇನ್ನೂ ಒಂದು ವಿಶಿಷ್ಟ ಲಕ್ಷಣ ಎಂದರೆ ಆ ಪಾತ್ರ ನಾವೂ ಆಗುವ ಸದವಕಾಶ ಇಲ್ಲಿದೆ.ಕನಿಷ್ಠ ಕೆಲವು ಸಮಯವಾದರೂ ನಮ್ಮನ್ನು ನಮ್ಮಿಂದ ದೂರ ಕರೆದೊಯ್ಯುವ ತಾಕತ್ತು ಇರುವುದು.ಇದು ಒಂದು ರೀತಿಯ ಬಯಲು ಆಲಯದೊಳಗೋ ಆಲಯವು ಬಯಲೋಳಗೋ ಎನ್ನುವ ಉಭಯ ರೀತಿಯ ಲೋಕ. ಬದುಕಿನ ಲಕ್ಷಣ.ಸಾಹಿತ್ಯ ಕಲಿಸುವ ಬದುಕು,ಬದುಕು ಕಲಿಸುವ ವಿದ್ಯೆ . ಫ್ಲೋರಿಡಾ ದೇಶದ ಭೌಗೋಳಿಕ ಸಂಗತಿಗಳಿಗಿಂತ, ಅಟ್ಲಾಂಟಿಕ್ ಸಾಗರದ ತೀರ ಪ್ರದೇಶಕ್ಕಿಂತ ಅದನ್ನು ನೋಡಲು ಹೋಗುವ ದಾರಿಯಲ್ಲಿ ಕಂಡ ವಿಶಾಲವಾದ ನದಿ ಮತ್ತು ಅದಕ್ಕಿರುವ ಹೆಸರಾದ ‘ಇಂಡಿಯಾ ರಿವರ’ ಬೋರ್ಡ್ ಓದಿದಾಗ ಧಿಡೀರನೆ ಇಡೀ ಅಮೆರಿಕ ನಮ್ಮದಾಗಿಬಿಡುತ್ತದೆ. ಶ್ರೀಲಂಕಾದ ಮೇಲೆ ಟಿಪ್ಪಣಿ ಬರೆಯಿರಿ ಎಂದಾಗ, ಅದರ ರಾಜಧಾನಿ ಯಾವುದು? ಅಲ್ಲಿಯ ಜನಸಂಖ್ಯೆ ಎಷ್ಟು ? ಅಲ್ಲಿಯ ಉಷ್ಣತಾಮಾನಕ್ಕಿಂತ ಸೇತುಕಟ್ಟಿ ಶ್ರೀಲಂಕೆಗೆ ಹೋದ ರಾಮಾಯಣದಿಂದಾಗಿ ಶ್ರೀಲಂಕಾ ನಮ್ಮದಾಗಿಬಿಡುತ್ತದೆ. ಇದನ್ನು ನಮಗೆ ಲಿಸುವುದು,ಬಾಹ್ಯ ಸಂಗತಿಗಳಲ್ಲ ಭಾವನಾ ಪ್ರಪಂಚ. ಅದು ಸಾಹಿತ್ಯ ಎಂದೇ ಧೃಡವಾದ ನಂಬಿಕೆ. ನಂಬಿಕೆ ಹುಸಿಯಾಗಲಾರದು ಎನ್ನುವುದು ಸಹ ನಂಬಿಕೆಯೇ. ಎಲ್ಲ ನಂಬಬೇಕು ಎನ್ನುವ ಹಟವೂ ಸಲ್ಲ. ನಂಬದಿರ್ದನು ತಂದೆ ನಂಬಿದನು ಪ್ರಹ್ಲಾದ ನಂಬಿಯೂ ನಂಬದಿರುವ ಇಬ್ಬಂದಿ ನೀನು ಕಂಬದಿನೋ, ಬಿಂಬದಿನೋ ಮೋಕ್ಷ ಅವರಿಂಗಾಯ್ತು. ಸಿಂಬಳದ ನೊಣ ನೀನು – ಮಂಕುತಿಮ್ಮ.                     ***************************************************************     ಪರಾಮರ್ಶನ ಸೂಚಿ. ವಿನಯ :- ಬೇಂದ್ರೆಯವರ ಆಯ್ದ ಕವನಗಳು. ಮಂಕುತಿಮ್ಮನ ಕಗ್ಗ :- ಡಿ.ವಿ.ಜಿ

ಹೀಗೊಂದು ಚಿಂತನೆ. Read Post »

ಇತರೆ, ಜೀವನ

ಯಶಸ್ಸು ಮತ್ತು ಸಾಧನೆ

ಲೇಖನ ಯಶಸ್ಸು ಮತ್ತು ಸಾಧನೆ ಮಾಲಾ ಕಮಲಾಪುರ್ ಪ್ರತಿಯೊಬ್ಬ ಮನುಷ್ಯನು ಯಶಸ್ಸನ್ನು ಬಯಸುತ್ತಾನೆ. ಅತ್ತ್ಯುತ್ತಮ ಗುಣ ಮಟ್ಟದ ಜೀವನ ವನ್ನು ಅನುಭವಿಸಲು ಹಂಬಲಿಸುತ್ತಾನೆ. ಆದರೆ ಅದನ್ನು ಸಾಧಿಸಿ ಅಂಥ ಜೀವನ ನಡೆಸುವವರು ಕೆಲವರು ಮಾತ್ರ ಬಲವಾದ ನಂಬಿಕೆ ವಿಶ್ವಾಸ ಇದ್ದವರು ಹಿಡಿದ ಕಾರ್ಯ ವನ್ನು ಸಾಧಿಸಿಯೇ ತೀರುತ್ತಾರೆ. ಇಂಥವರಿಗೆ ಕಾಲು ಎಳೆಯುವವರು ಸಾವಿರಾರು.ಎಲ್ಲಿ ಸಾಧನೆ ಮಟ್ಟ ಇರುತ್ತದೆಯೋ ಅಲ್ಲಿ ಟೀಕಿಸುವವರು ನಮ್ಮ ಹಿಂದೆಯೇ ಇರುವರು . ನಾವುಹಿಂದೆ ನೋಡದೆ ಮುಂದೆ ಸಾಗುತ್ತ ಹೋಗಬೇಕು ಹಿತೈಷಿಗಳ ಮಾರ್ಗ ದರ್ಶನಇದ್ದರೆ ಸಾಕು ನಾವು ಗುರಿ ಮುಟ್ಟುವುದರಲ್ಲಿ ಸಂಶಯವೇ ಇಲ್ಲಾ.ಅಬ್ರಹಾಂಲಿಂಕನ್ ಜೀವನದಲ್ಲಿ ಸಾಕಷ್ಟು ನೋವು ಸಂಕಟ ಜನರ ಅಸೂಹೆ ಇವೆಲ್ಲದರ ನಡುವೆ ದೃತಿ ಗೆಡದೆ ಸಂಪೂರ್ಣ ಆತ್ಮ ವಿಶ್ವಾಸ ದಿಂದ ತಮ್ಮ ಗುರಿ ತಲುಪಿದರು.ಮುಖ್ಯ ವಾಗಿ ನಮ್ಮಲ್ಲಿ ಪ್ರಾಮಾಣಿಕತೆ ಇದ್ದು ಸರಳ ಭಾವನೆ ಇದ್ದಾಗ ನಮಗೆ ದೇವರಲ್ಲಿ ಅಚಲವಾದ ಭಕ್ತಿ ವಿಶ್ವಾಸ ಇದ್ದರೆ ನಾವು ನಮ್ಮ ಗುರಿ ಮುಟ್ಟುತ್ತೇವೆ.ವಿನಯ ಮತ್ತು ಸೌಜನ್ಯ ಸ್ವಭಾವ ನಮ್ಮ ಮನಸಿನ ಕನ್ನಡಿ ನಾವು ಮತ್ತೊಬ್ಬರಾಗುವದು ಬೇಡ ನಾವು ನಾವಾದರೆ ಸಾಕು ನಮ್ಮ ಜೀವನ ದಲ್ಲಿ ಅದೆಷ್ಟೋ ಆನಂದ ಅನುಭವಿಸುತ್ತವೆ. ಇದನ್ನು ನೋಡಿ ಕೆಲವರು ಅಸೂಹೆ ಮಾಡಿ ಕುಹಕ ನಗು ತೋರಿಸಿದರು ನಾವು ನಿರ್ಲಕ್ಷಿಸಬೇಕು ಅದೊಂದೇ ದಾರಿ. ಮುಖ್ಯವಾಗಿ ನಾವು ಮಾಡುವ ಕೆಲಸ ಕಾರ್ಯ ಮತ್ತು ಯಾವುದೇ ವಿದ್ಯೆ ಯಲ್ಲಿ ವಿಚಾರದಲ್ಲಿ ನಿಖರ ಮತ್ತು ದಿಟ್ಟ ವಿಚಾರವೇ ನಮಗೆ ಇದ್ದರೆ ಸಾಕು. ನಮ್ಮಲ್ಲಿ ಆತ್ಮ ವಿಶ್ವಾಸವೇ ನಮ್ಮನ್ನು ಎತ್ತಿ ಹಿಡಿಯುತ್ತದೆ. ನಾವು ಯಾವುದೇ ಸನ್ಮಾರ್ಗದಲ್ಲಿ ಇದ್ದಾಗ ನಮ್ಮ ಮನಸು ಯಾರಿಗೂ ಬಗ್ಗುವುದಿಲ್ಲ ನಾವು ಯಾವುದೇ ಕಲೆ ಮತ್ತು ವಿದ್ಯೆ ಕಲಿಯಬೇಕಾದರೆ ವಯಸ್ಸು ಬೇಕಾಗಿಲ್ಲ ನಮ್ಮ ದೇಹಕ್ಕೆ ವಯಸ್ಸಾದರೂ ನಮ್ಮ ಮನಸ್ಸಿಗೆ ಆಗಿರುವುದಿಲ್ಲ. ನಮ್ಮಲ್ಲಿ ಸದ್ರಡ ಮನಸ್ಸು ವಿವೇಚನಾ ಶಕ್ತಿ, ಸಾಧಿಸುವ ಸಂಕಲ್ಪವೇ ನಮ್ಮ ಯಶಸ್ಸಿನ ಮೆಟ್ಟಲುಗಳು.ಇದಕ್ಕೆ ಉದಾಹರಣೆ ಯಾಗಿ ನೋಡಬೇಕೆಂದರೆ ಅಕ್ಷರ ಕಲಿಯದೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡಿದ ಸಾಲು ಮರದ ತಿಮ್ಮಕ್ಕ ಅದೆಷ್ಟು ಗಿಡ ಮರಗಳನ್ನು ಮಕ್ಕಳಂತೆ ಪ್ರೀತಿಸಿ ಬೆಳೆಸಿದವರು ಮುಪ್ಪು ವಯಸ್ಸಿನಲ್ಲೂ ಹುರುಪು ಅವರಿಗೆ.ಅವರ ಸೇವೆ ಇಡೀ ಜಗತ್ತು ಬೆರಗಾಗುವಂತೆ ನೋಡುತ್ತಿದೆ. ಹಿಂದೆ ನಮ್ಮೆಲ್ಲರ ಪೂರ್ವಜರು ಯಾವುದೇ ಪೈಪೋಟಿ ಮಾಡದೇ ಅಚಲ ನಿರ್ಧಾರ ಮತ್ತು ನಿಷ್ಕಲ್ಮಶ ಮನಸ್ಸು, ನಿಸ್ವಾರ್ಥ ಸೇವಾ ಮನೋಭಾವದಿಂದ, ಯಾರಿಗೂ ಮನಸ್ಸನ್ನು ನೋಯಿಸದೆ ಬದುಕಿನಲ್ಲಿ ತನ್ನದೇ ಛಾಪು ಮೂಡಿಸಿದವರು.ನಾವು ಸಮಯಕ್ಕೆ ಮತ್ತು ನಮಗೆ ದಾರಿತೋರಿಸುವ ಗುರುಗಳಿಗೆ ಬೆಲೆ ಕೊಟ್ಟಾಗ ನಮ್ಮ ಜೀವನ ಸ್ವಲ್ಪ ಮಟ್ಟಿಗಾದರೂ ಸಾರ್ಥಕವಾದಿತು.ನಾವು ಒಂದಿಷ್ಟು ಅವರ ಮಾರ್ಗ ದಲ್ಲಿ ಸಾಗೋಣ. ಇದ್ದುದರಲ್ಲಿ ನೈಜ ಸುಖ, ಶಾಂತಿ ಪಡೆಯೋಣ.ಸಾತ್ವಿಕ ವಿಚಾರ, ಸಂತೃಪ್ತಿ ಮತ್ತು ಸಕಾರಾತ್ಮ ವಿಚಾರ ಇವು ನಮ್ಮ ಯಶಸ್ಸಿಗೆ ಬೆಳಕು ತೋರಿಸುವ ದಾರಿ ದೀಪಗಳೆಂದರೆ ತಪ್ಪಾಗದು. ********************************

ಯಶಸ್ಸು ಮತ್ತು ಸಾಧನೆ Read Post »

ಇತರೆ, ಜೀವನ

ಆತ್ಮ ವಿಶ್ವಾಸವಿರಲಿ…

ಲೇಖನ ಆತ್ಮ ವಿಶ್ವಾಸವಿರಲಿ… ರಶ್ಮಿ ಹೆಗಡೆ ಕ್ರಿ.ಶ 1306 ರಲ್ಲಿ ಸ್ಕಾಟ್ ಲ್ಯಾಂಡನ್ನು ಆಳುತ್ತಿದ್ದ ರಾಬರ್ಟ್ ಬ್ರೂಸ್ ಎಂಬ ದೊರೆ ತನ್ನ ಧೈರ್ಯ  ಧೈರ್ಯ,ಶೌರ್ಯಕ್ಕೆ ಹೆಸರಾಗಿದ್ದ. ಒಮ್ಮೆ ಇಂಗ್ಲೆಂಡಿನ ದೊರೆ ತನ್ನ ಸುಸಜ್ಜಿತವಾದ ಸೈನ್ಯದೊಂದಿಗೆ ಸ್ಕಾಟ್ ಲ್ಯಾಂಡ್ ಮೇಲೆ ದಾಳಿ ನಡೆಸಿದ. ಬ್ರಿಟಿಷ್ ಸೈನ್ಯದೆದುರು ಬಹಳ ಚಿಕ್ಕದಾಗಿದ್ದರೂ,ಹೋರಾಟ ಮನೋಭಾವ ಹೊಂದಿದ್ದ ತನ್ನ ಸೈನ್ಯವನ್ನು ಬ್ರೂಸ್ ಆರು ಬಾರಿ ಮುನ್ನಡೆಸಿದ. ದುರದೃಷ್ಟವೆಂಬಂತೆ ಆರು ಬಾರಿಯೂ ಆತನ ತುಕಡಿ ಸೋಲುಂಡಿತ್ತು,ರಾಜ್ಯವನ್ನು ಉಳಿಸಿಕೊಳ್ಳುವ ಎಲ್ಲ ಎಲ್ಲ ಭರವಸೆಗಳನ್ನೂ ಕಳೆದುಕೊಂಡಿತು.ಚದುರಿದ ಸೈನ್ಯದಲ್ಲಿ ಉಳಿದ ಕೆಲವೇ ಕೆಲವು ಸೈನಿಕರೂ ಜೀವದ ಆಸೆಗಾಗಿ ರಣರಂಗದಿಂದ ದೂರ ಸರಿದರು.ಸೋಲನ್ನೇ ಅರಿಯದ ಬ್ರೂಸ್ ಆತ್ಮಸ್ಥೈರ್ಯ ಕಳೆದುಕೊಂಡು ಕಂಗಾಲಾದ. ಜೀವ ಉಳಿಸಿಕೊಳ್ಳಲು ತಲೆಮರೆಸಿಕೊಂಡ. ಗುಡ್ಡ ಬೆಟ್ಟ, ಕಣಿವೆಗಳಲ್ಲಿ ಏಕಾಂಗಿಯಾಗಿ ಅಲೆಯತೊಡಗಿದ.ಹೀಗಿದ್ದಾಗ ಒಮ್ಮೆ ಜೋರಾಗಿ ಮಳೆ ಸುರಿಯಲಾರಂಭಿಸಲು ಬ್ರೂಸ್ ಒಂದು ಗುಹೆಯಲ್ಲಿ ಬಂದು ಆಶ್ರಯ ಪಡೆದ. ನಡೆದಿದ್ದನ್ನು ಮೆಲುಕುಹಾಕುತ್ತ ಕುಳಿತಿದ್ದ ಬ್ರೂಸ್ ನನ್ನು ನಾಜೂಕಾಗಿ ಬಲೆ ನೇಯುತ್ತಿರುವ ಪುಟ್ಟ ಜೇಡವೊಂದು ಆಕರ್ಷಿಸಿತು.ನೇಯುವಾಗ ಪ್ರತಿಬಾರಿಯೂ ವಿಫಲಗೊಂಡು ಬೀಳುತ್ತಿದ್ದ ಜೇಡ ಮತ್ತೆ ಮೇಲೇರುತ್ತಿತ್ತು.  ಪ್ರತಿಬಾರಿ ಬಿದ್ದಾಗಲೂ ಮೊದಲಿಗಿಂತ ಹೆಚ್ಚಿನ ಎಚ್ಚರಿಕೆವಹಿಸುತ್ತಿದ್ದ ಜೇಡ ಕೊನೆಗೂ ಬಲೆ ನೇಯುವುದರಲ್ಲಿ  ಯಶಸ್ವಿಯಾಯಿತು. ಸೋಲಿಗೆ ಹೆದರದೆ,ಆತ್ಮವಿಶ್ವಾಸ ತೊರೆಯದೆ,ಸತತವಾಗಿ ಪ್ರಯತ್ನಿಸಿ,ಸೋಲನ್ನೇ ಸೋಲಿಸಿದ ಜೇಡದ ಆತ್ಮಬಲ ಹಾಗೂ ಕಾರ್ಯವೈಖರಿ ಬ್ರೂಸ್  ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಿತು. ಬ್ರೂಸ್ ತನ್ನ ವೈಫಲ್ಯಕ್ಕೆ ತಾನೇ ಸವಾಲೊಡ್ಡಿದ. ಅಷ್ಟು ಚಿಕ್ಕ ಕೀಟವೇ ಸೋಲನೊಪ್ಪಿಕೊಳ್ಳದಿರುವಾಗ ತಾನೇಕೆ ತನ್ನ ಪತನವನ್ನು ಒಪ್ಪಿಕೊಳ್ಳಲಿ ಎಂದು ಯೋಚಿಸುತ್ತ,ಹೊಸ ಹುರುಪಿನೊಂದಿಗೆ ಹೊಸ ವ್ಯಕ್ತಿಯಾಗಿ ಗುಹೆಯನ್ನು ತೊರೆದ. ಮತ್ತೆ ಸೈನ್ಯವನ್ನು ಕಟ್ಟಲು ನಿರ್ಧರಿಸಿ ಜನರನ್ನು ಸೇರಿಸಿದ. ಮೊದಲಿಗಿಂತ ಹೆಚ್ಚು ಬಲಿಷ್ಠವಾದ ಸೈನ್ಯ ಕಟ್ಟಿದ. ಮತ್ತದೇ ಬ್ರಿಟಿಷ್ ದೊರೆಯೊಂದಿಗೆ ಹೋರಾಡಿ ತನ್ನ ರಾಜ್ಯವನ್ನು ಮರಳಿ ಪಡೆದ. ಬ್ರಿಟಿಷರಿಂದ ಸ್ಕಾಟ್ಲೆಂಡ್ ನ್ನು ಮುಕ್ತಗೊಳಿಸಿ ಹೊಸ ಇತಿಹಾಸವನ್ನೇ ರಚಿಸಿದ. ” ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ,ಮನಸೊಂದಿದ್ದರೆ ಮಾರ್ಗವು ಉಂಟು ಕೆಚ್ಚೆದೆ ಇರಬೇಕೆಂದೆಂದೂ”ಎಂಬ ಸಾಲುಗಳು ಇಂದಿಗೂ ಸತ್ಯ.ಯಶಸ್ಸಿನ ಮೂಲ ಮಂತ್ರವೆಂದರೆ ಅದು ‘ಆತ್ಮವಿಶ್ವಾಸ’. ಸಾಧನೆಯ ಹಾದಿಯಲ್ಲಿ ನಡೆಯುವವನಿಗೆ ತೊಡಕುಗಳು ಅನೇಕ.  ಕಲ್ಲು ಮುಳ್ಳು,ಬಿಸಿಲು ಬವಣೆಗಳಿರದ ದಾರಿ ಯಾವುದಿದ್ದೀತು? ಅದೆಷ್ಟೋ ಬಾರಿ ಸಾಧನೆಯತ್ತ ಸಾಗುವ ಮೊದಲ ಹೆಜ್ಜೆಗಳು ತಡವರಿಸಿದಾಗ,ಭಯಪಟ್ಟು,ಮುನ್ನಡೆವ ಭರವಸೆ ಕಳೆದುಕೊಂಡು ಮುಂದೆ ಹೆಜ್ಜೆ ಇಡುವುದನ್ನೇ ನಿಲ್ಲಿಸಿ ಬಿಡುತ್ತೇವೆ. ಹಾಗಂತ ಮುನ್ನಡೆವ ಶಕ್ತಿ ಇಲ್ಲವೆಂದಲ್ಲ,ಆ ಶಕ್ತಿಯ ಪರಿಚಯ ನಮಗೇ ಇರುವುದಿಲ್ಲವಷ್ಟೇ! ಜೀವನದಲ್ಲಿ  ಗುರಿಯೊಂದಿದ್ದರೆ ಸಾಲದು, ಗುರಿಯತ್ತ ಪಯಣಿಸಲು ಬೇಕಾದ ಸಮಚಿತ್ತ,ತಾಳ್ಮೆ ಹಾಗೂ ಏಕಾಗ್ರತೆಯ ಜೊತೆಗೆ ಮುಖ್ಯವಾಗಿ ಇರಬೇಕಾದ್ದು ‘ಆತ್ಮವಿಶ್ವಾಸ’.   “ಧೈರ್ಯಮ್ ಸರ್ವತ್ರ ಸಾಧನಂ” ಎಂದು ಆತ್ಮವಿಶ್ವಾಸದಿಂದ ಎದ್ದು ನಿಂತು ಧೈರ್ಯದಿಂದ ಪ್ರಯಾಣ ಮುಂದುವರೆಸುವ ಗುಣ ನಮ್ಮೆಲ್ಲರಲ್ಲಿದ್ದರೆ ಯಾವ ಸಾಧನೆಯೂ ಎಟುಕದ ನಕ್ಷತ್ರವಾಗಲಾರದು. ಯಶಸ್ಸಿನ ಹೆಬ್ಬಯಕೆಯ ಜೊತೆ ಆತ್ಮವಿಶ್ವಾಸವೂ ಜೊತೆಗಿದ್ದಾಗ, ಸ್ವಸಾಮರ್ಥ್ಯದ ಮೇಲಿನ ನಂಬಿಕೆಯು ವಿಫಲತೆಯ ತೀವ್ರ ಭಯವನ್ನು ಮೆಟ್ಟಿನಿಂತಾಗ ಖಂಡಿತವಾಗಿ ಯಶಸ್ಸು ನಮ್ಮದಾಗುತ್ತದೆ **************************************

ಆತ್ಮ ವಿಶ್ವಾಸವಿರಲಿ… Read Post »

ಇತರೆ, ಜೀವನ

ಕಾನೂನು, ಮಹಿಳೆ ಮತ್ತು ಅರಿವು

ಅಂಜಲಿ ರಾಮಣ್ಣ ಬರೆಯುತ್ತಾರೆ
ಇದು ನನಗೆ ಕಲಿಸಿದ್ದು ಎರಡು ಪಾಠ. ಒಂದು ಹೆಂಗಸು ಮನಸ್ಸು ಮಾಡಿದರೆ, ಬುದ್ಧಿಯ ಮೂಲಕ ಗಳಿಸಿಕೊಂಡ ಆತ್ಮವಿಶ್ವಾಸ ಇದ್ದರೆ ಯಾರದ್ದೇ ಆಗಿರಲಿ, ಯಾವುದೇ ರೀತಿಯ ಮುಜುಗರವನ್ನು ಹೋಗಲಾಡಿಸಬಲ್ಲಳು

ಕಾನೂನು, ಮಹಿಳೆ ಮತ್ತು ಅರಿವು Read Post »

ಇತರೆ, ಜೀವನ

ನೀರು ಕುಡಿಯಿರಿ

ಲೇಖನ ನೀರು ಕುಡಿಯಿರಿ ಆಶಾ ಸಿದ್ದಲಿಂಗಯ್ಯ ಜನರು ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನೀರನ್ನು ಕುಡಿಯುವುದೇ ಮರೆತಿದ್ದಾರೆ ಆದರೆ ನೀರು ಆರೋಗ್ಯಕ್ಕೆ ಅತ್ಯವಶ್ಯಕ.. ನಮ್ಮ ಉಳಿವಿಗಾಗಿ ನೀರು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಬಾಯಾರಿಕೆಯನ್ನು ನೀಗಿಸುವುದಕ್ಕೆ ಮಾತ್ರವಲ್ಲ, ದೇಹ ಸರಿಯಾಗಿ ಕೆಲಸ ಮಾಡಲು ಹಾಗೂ ರೋಗ ಮುಕ್ತವಾಗಿಡಲು ನೀರು ಅಗತ್ಯ. ದೇಹದ ತೂಕ ಇಳಿಸಲು ಸಹ ನೀರು ಕುಡಿಯುವುದು ಸಹಾಯಕಾರಿ. ಬಿಸಿನೀರು ಕುಡಿದರೆ ದೇಹದ ತೂಕ ಕಡಿಮೆ ಆಗಲು ಸಹಾಯ ಆಗುತ್ತಾ? ನಮ್ಮ ದೇಹದ ಸುಮಾರು 70% ರಷ್ಟು ನೀರಿನಿಂದ ಕೂಡಿದೆ ಹಾಗೂ ದೇಹದ ವ್ಯವಸ್ಥೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ, ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯು ಪ್ರತಿದಿನ 2-3 ಲೀಟರ್ ನೀರನ್ನು ಸೇವಿಸುವುದು ಅತ್ಯಗತ್ಯ. ತಣ್ಣನೆ ಮತ್ತು ಬಿಸಿನೀರು ಎರಡೂ ತಮ್ಮದೇ ಆದ ಬಾಧಕಗಳನ್ನು ಹೊಂದಿವೆ. ತೀವ್ರವಾದ ವರ್ಕೌಟ್‌ ನಂತರ ತಣ್ಣಗಾಗಲು ಒಂದು ಲೋಟ ತಣ್ಣೀರು ನಿಮಗೆ ಸಹಾಯ ಮಾಡುತ್ತದೆ, ಆದರೆ ಬಿಸಿನೀರು ದೇಹದಿಂದ ಟಾಕ್ಸಿನ್‌ ಹೊರಹಾಕಲು ಸಹಾಯ ಮಾಡುವುದರೊಂದಿಗೆ ಆಹಾರವನ್ನು ಉತ್ತಮವಾಗಿ ಜೀರ್ಣಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದಲ್ಲದೆ, ಕುಡಿಯುವ ನೀರು ವಿಶೇಷವಾಗಿ ಬಿಸಿನೀರು ತೂಕ ಕರಗಿಸಲು ಸಹಾಯ ಮಾಡುತ್ತದೆ. ಅದು ನಿಜವೇ? ಹೆಚ್ಚು ನೀರು ಕುಡಿಯುವುದರಿಂದ ಒಬ್ಬ ವ್ಯಕ್ತಿಯು ತೂಕ ಕಳೆದು ಕೊಳ್ಳುತ್ತಾನೆ. ಇದಕ್ಕೆ  ಕಾರಣವೆಂದರೆ ನೀರು ಹೊಟ್ಟೆ ತುಂಬಿರುವ ಫೀಲ್‌ ನೀಡುತ್ತದೆ, ಪೋಷಕಾಂಶಗಳನ್ನು ಹೀರಿಕೊಳ್ಳಲು ದೇಹಕ್ಕೆ ಸಹಕರಿಸುತ್ತದೆ. ವಿಷಕಾರಿ ತ್ಯಾಜ್ಯವನ್ನು ಹೊರಹಾಕುತ್ತದೆ, ಎಂದು ಸಂಶೋಧನೆಯೊಂದು ಹೇಳಿದೆ. 2003ರಲ್ಲಿ ಪ್ರಕಟವಾದ ಮತ್ತೊಂದು ಅಧ್ಯಯನದ ಪ್ರಕಾರ, ಬಿಸಿನೀರನ್ನು ಕುಡಿಯುವುದರಿಂದ ತೂಕ ಇಳಿಸುವ ಪ್ರಕ್ರಿಯೆಯನ್ನು ಹೆಚ್ಚಿಸಬಹುದು. ಊಟಕ್ಕೆ ಮುಂಚಿತವಾಗಿ 500 ಮಿಲಿ ನೀರನ್ನು ಕುಡಿಯುವುದು ಮೆಟಾಬಾಲಿಸಮ್‌  30% ಹೆಚ್ಚಿಸುತ್ತದೆ. ಪ್ರತಿದಿನ ಬೆಳಿಗ್ಗೆ ಅಥವಾ ದಿನವಿಡೀ ಬಿಸಿ ಅಥವಾ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ತೂಕ ಇಳಿಸುವ ಪ್ರಕ್ರಿಯೆಗೆ ಮೂರು ವಿಧಗಳಲ್ಲಿ ಸಹಾಯವಾಗುತ್ತದೆ. ಬಿಸಿನೀರು ಕುಡಿಯುವುದರಿಂದ ನಿಮ್ಮ ದೇಹದ ಉಷ್ಣತೆ ಬದಲಾಗುತ್ತದೆ. ನೀರಿನ ಬೆಚ್ಚಗಿನ ತಾಪಮಾನವನ್ನು ಸರಿದೂಗಿಸಲು, ನಮ್ಮ ದೇಹವು ಆಂತರಿಕ ತಾಪಮಾನವನ್ನು ಕಡಿಮೆ ಮಾಡುತ್ತದೆ ಮತ್ತು ಚಯಾಪಚಯವನ್ನು ಸಕ್ರಿಯಗೊಳಿಸುತ್ತದೆ. ದೇಹದಲ್ಲಿನ ಕೊಬ್ಬನ್ನು ಒಡೆಯುತ್ತದೆ ಮತ್ತು ಅವುಗಳನ್ನು ಅಣುಗಳಾಗಿ ಪರಿವರ್ತಿಸುತ್ತದೆ, ಇದರಿಂದಾಗಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಫ್ಯಾಟ್‌ ಬರ್ನ್‌ ಸುಲಭಗೊಳಿಸುತ್ತದೆ. ಹಸಿವನ್ನು ನೀಗಿಸಲು ಬೆಚ್ಚಗಿನ ನೀರು ಸಹಾಯ ಮಾಡುತ್ತದೆ. ನಿಮ್ಮ ಊಟಕ್ಕೆ 30 ನಿಮಿಷಗಳ ಮೊದಲು ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿದರೆ ನಿಮ್ಮ ಕ್ಯಾಲೊರಿ ಬರ್ನ್ ಆಗುವುದರಲ್ಲಿ ಅನುಮಾನವೇ ಇಲ್ಲ. ಜೀರ್ಣಕ್ರಿಯೆಯ ಪ್ರಕ್ರಿಯೆಯ ಸುಗಮವಾಗಿಸಲು ನೀರು ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ನಮಗೆ  ಜೀರ್ಣಿಸಿಕೊಳ್ಳಲು ಕಷ್ಟಪಡುವ ಆಹಾರ ಕಣಗಳನ್ನು ಸಹ ಕರಗಿಸಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಬಿಸಿನೀರು ನರಮಂಡಲವನ್ನು ಶಾಂತಗೊಳಿಸುತ್ತದೆ. ನಮ್ಮ ನರಮಂಡಲವು ಶಾಂತವಾಗಿದ್ದಾಗ, ನಾವು ಕಡಿಮೆ ನೋವುಗಳನ್ನು ಅನುಭವಿಸುವುದಲ್ಲದೆ, ದಿನವಿಡೀ ಶಾಂತವಾಗಿರಲು ನಮಗೆ ಸಹಾಯ ಮಾಡುತ್ತದೆ. ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಬಿಸಿನೀರು ನಿಮ್ಮ ಕರುಳನ್ನು ಸಂಕುಚಿತಗೊಳಿಸುತ್ತದೆ, ಇದು ಕರುಳಿನಲ್ಲಿನ ಅಡಚಣೆಯನ್ನು ಕಡಿಮೆ ಮಾಡಿ ಮಲ ವಿಸರ್ಜನೆ ಸುಲಭಗೊಳಿಸುತ್ತದೆ. ಕುಡಿಯುವ ನೀರು ವ್ಯಕ್ತಿಯ ದೇಹದ ಉಷ್ಣತೆಯನ್ನು ಹೆಚ್ಚಿಸಿ ಬೆವರುವಂತೆ ಮಾಡುತ್ತದೆ. ಬೆವರುವಿಕೆಯ ರಂಧ್ರಗಳಿಂದ ಟಾಕ್ಸಿನ್‌ ಹೊರಹಾಕುತ್ತದೆ ************************************************************************

ನೀರು ಕುಡಿಯಿರಿ Read Post »

ಇತರೆ, ಮಕ್ಕಳ ವಿಭಾಗ

ಪ್ರತಿಫಲ

ಮಕ್ಕಳ ಕಥೆ ಪ್ರತಿಫಲ ಬಸವರಾಜ ಕಾಸೆ ದಿನವೂ ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿ ಅದನ್ನು ಬರೆದುಕೊಂಡು ಬರಬೇಕು ಎಂದು ಕ್ಲಾಸ್ ಟೀಚರ್ ಹೇಳುತ್ತಿದ್ದರು. ಆದರೆ ಅವಕಾಶ ಇದ್ದಾಗಲೂ ಅಂತಹ ಕೆಲಸವನ್ನು ಯಾವ ಮಕ್ಕಳು ಮಾಡುತ್ತಿರಲಿಲ್ಲ. ಅದರಲ್ಲಿ ವಿಶೇಷವಾಗಿ ಚೂಟಿ ಮಾಡುತ್ತಾನೆ ಇರಲಿಲ್ಲ. ಆದರೆ ದಿನವೂ “ಇಂದು ರಸ್ತೆಯಲ್ಲಿ ಬಿದ್ದ ಮುಳ್ಳು ತೆಗೆದು ಹಾಕಿದೆ”, “ಕಲ್ಲು ತೆಗೆದು ಹಾಕಿದೆ”, “ವೃದ್ಧರಿಗೆ ರಸ್ತೆ ದಾಟಲು ಸಹಾಯ ಮಾಡಿದೆ”, “ಮನೆ ಕಸ ಗುಡಿಸಿದೆ”, “ಅಮ್ಮನಿಗೆ ಅಡುಗೆಯಲ್ಲಿ ನೆರವಾದೆ” ಹೀಗೆ ಸುಮ್ಮಸುಮ್ಮನೆ ಏನಾದರೂ ಬರೆದುಕೊಂಡು ಹೋಗುತ್ತಿದ್ದಳು. ಚೂಟಿಯ ಗೆಳತಿಯಾದ ಪುಟ್ಟಿಯು ನಿಜವಾಗಿಯೂ ಮಾಡುವ ಮನಸ್ಸು ಹೊಂದಿದ್ದಳು ಮತ್ತು ಗಮನಕ್ಕೆ ಬಂದರೆ ಮಾಡುತ್ತಿದ್ದಳು. ಆದರೆ ಇದನ್ನೆಲ್ಲಾ ಎಷ್ಟೋ ಸಲ ಚೂಟಿಯೇ ತಡೆದಿದ್ದಳು. ಅವತ್ತು ಒಂದು ದಿನ ಚೂಟಿ ಮತ್ತು ಪುಟ್ಟಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಯಾರೋ ಮಾವಿನ ಹಣ್ಣು ತಿನ್ನುತಿರುವದನ್ನು ಕಂಡು ಇವರಿಬ್ಬರಿಗೂ ತಿನ್ನಬೇಕು ಎನಿಸಿತು. ಆದರೆ ಇಬ್ಬರ ಬಳಿಯೂ ದುಡ್ಡು ಇರಲಿಲ್ಲ. ಹಾಗೆ ಆಸೆಗಣ್ಣಿನಲ್ಲಿ ಮುಂದೆ ಮುಂದೆ ಬರುವಾಗ ಅಲ್ಲಿ ಒಬ್ಬಳು ಅಜ್ಜಿ ರಸ್ತೆ ದಾಟಲಾಗದೆ ತಲೆ ಮೇಲೆ ಬುಟ್ಟಿ ಹೊತ್ತು ನಿಂತಿದ್ದಳು. ಒಂದಾದ ಮೇಲೆ ಒಂದು ವಿಪರೀತ ವಾಹನಗಳ ಓಡಾಟ. “ಪಾಪ, ನೋಡೇ… ಆ ಅಜ್ಜಿಗೆ ಸಹಾಯ ಮಾಡೋಣ, ಬಾ ಆ ಕಡೆ ಹೋಗೋಣ” ಎಂದರೂ “ಹೋಗೇ, ಯಾರು ಬರತಾರೆ” ಎಂದಳು. ಆಗ ಪುಟ್ಟಿ ಒಬ್ಬಳೇ ಹೋಗಿ ಮೆಲ್ಲಗೆ ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದಳು. “ಸ್ವಲ್ಪ ಬುಟ್ಟಿ ಇಳಿಸು ಮರಿ ಹಾಗೆ” ಎಂದಾಗ ಅಜ್ಜಿ, ಪುಟ್ಟಿ ಇಳಿಸಿದಳು. ನೋಡಿದರೆ ಆ ಬುಟ್ಟಿ ತುಂಬಾ ಮಾವಿನ ಹಣ್ಣು “ತಗೋ, ತಿನ್ನು” ಅಂತ ಅಜ್ಜಿ ಕೊಟ್ಟರೂ “ಬೇಡ ಬೇಡ” ಎಂದು ಆಮೇಲೆ ತೆಗೆದುಕೊಂಡಳು. ದೂರದಲ್ಲಿಯೇ ನಿಂತು ನೋಡತಾ ಚೂಟಿ ಹೊಟ್ಟೆಕಿಚ್ಚು ಪಟ್ಟುಕೊಂಡು ಮುಖ ಉದಿಸಿಕೊಂಡಳು. “ಅಜ್ಜಿ ಅವಳು ನನ್ನ ಪ್ರೇಂಡ್” ಎಂದಾಗ ಅವಳನ್ನು “ಬಾ ಇಲ್ಲಿ, ಮಾವಿನ ಹಣ್ಣು ತಗೋ” ಎಂದಾಗ ಆಸೆಗಣ್ಣಿನಿಂದ ಓಡಿ ಬರಲು ಕಾಲಿಗೆ ಮುಳ್ಳು ಚುಚ್ಚಿತು. “ಯಾರಾದರೂ ಸೈಡಿಗೆ ಈ ಮುಳ್ಳು ಹಾಕಿದರೆ ನನ್ನ ಕಾಲಿಗೆ ಹೀಗೆ ಆಗ್ತಾ ಇರಲಿಲ್ಲ” ಎಂದು ಬೈಯಿಕೊಂಡಳು. ಹಾಗೆ ಕುಂಟುತ್ತಾ ಬಂದ ಅವಳಿಗೂ ಅಜ್ಜಿ ಮಾವಿನ ಹಣ್ಣು ನೀಡಿದಳು. ಅದರಿಂದ ಸಂತುಷ್ಟಳಾದ ಚೂಟಿ “ನಾವು ಇನ್ನೊಬ್ಬರಿಗೆ ಸಹಾಯ ಮಾಡಿದರೆ ನಮಗೂ ಮತ್ತೆ ಯಾರೋ ಸಹಾಯ ಮಾಡುತ್ತಾರೆ, ಒಳ್ಳೆಯ ಕೆಲಸಕ್ಕೆ ಒಳ್ಳೆಯ ಪ್ರತಿಫಲ” ಎಂದು ಖುಷಿಗೊಂಡು ತನ್ನ ನಡವಳಿಕೆಯನ್ನು ಬದಲಿಸಿಕೊಳ್ಳಬೇಕು ಎಂದು ನಿರ್ಧರಿಸಿ ಮಾವಿನ ಹಣ್ಣು ತಿಂದಳು ***********************************************

ಪ್ರತಿಫಲ Read Post »

ಇತರೆ, ಪ್ರಬಂಧ

ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ

ಲಲಿತ ಪ್ರಬಂಧ ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ… ಟಿ.ಎಸ್.ಶ್ರವಣಕುಮಾರಿ ಇಮಾಂ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ’ ಎಂದು ಹೇಳುವಂತೆ ‘ಸಲಾಂ ಸಾಬಿಗೂ ಸಂಕ್ರಾಂತಿಗೂ ಏನು ಸಂಬಂಧ’ ಎಂದು ಹುಬ್ಬೇರಿಸುತ್ತೀರೇನೋ! ಪ್ರತಿ ಸಂಕ್ರಾಂತಿಗೂ ಸಲಾಮನನ್ನು ನೆನಸಿಕೊಳ್ಳದೆ ನನಗೆ ಸಂಕ್ರಾಂತಿ ಹಬ್ಬ ಆಗುವುದೇ ಇಲ್ಲ. ಈಗೊಂದೈವತ್ತು ವರ್ಷಗಳ ಹಿಂದೆ ಜನಸಾಮಾನ್ಯರಿಗೆ ಶಿವಮೊಗ್ಗದಲ್ಲಿ ಸಂಚಾರಕ್ಕೆ ಇದ್ದದ್ದು ಎರಡೇ ರೀತಿ. ಮೊದಲನೆಯದು ನಟರಾಜ ಸರ್ವೀಸ್ ಅಂದರೆ ಕಾಲ್ನಡಿಗೆಯಲ್ಲಿ ಹೋಗುವುದು; ಇನ್ನೊಂದು ಕುದುರೆ ಗಾಡಿ. ಕಾರೆನ್ನುವುದು ಅತಿ ಶ್ರೀಮಂತರ ಸೊತ್ತು ಬಿಡಿ; ನಮದಲ್ಲ. ಊರಲ್ಲಿ ಎಷ್ಟು ಕಾರಿದ್ದವೆಂದರೆ ಓಡಾಡುತ್ತಿದ್ದ ಕಾರು ಇಂತವರದೇ ಎಂದು ಹೇಳುವಷ್ಟು! ಸೈಕಲ್ಲುಗಳು ಸ್ಕೂಟರಿನ ಸ್ಥಾನಮಾನವನ್ನು ಪಡೆದಿದ್ದವು. ಅಲ್ಲಿಲ್ಲಿ ಸುವೇಗಾದಂತಹ ಮೊಪೆಡ್ ಗಳು ‘ನಾವೂ ಇದ್ದೀವಿ’ ಎಂದು ಮುಖದೋರುತ್ತಿದ್ದವು. ಇಷ್ಟೆಲ್ಲಾ ಪರಟಾವಣೆ ಏತಕ್ಕೆಂದರೆ ನಾವೆಲ್ಲಾ ನಟರಾಜ ಸರ್ವೀಸಿನವರೇ ಆದರೂ, ನಮ್ಮಮ್ಮ ಮಾತ್ರ ಎಲ್ಲಿಗೆ ಹೋಗುವಾಗಲೂ ಅವರಿಗೆ ಕುದುರೆಗಾಡಿಯೇ ಬೇಕಿತ್ತು. ನಾವ್ಯಾರಾದರೂ ಅಮೀರ್ ಅಹ್ಮದ್ ಸರ್ಕಲ್ಲಿನವರೆಗೆ ಹೋಗಿ ತಂದು ಕೊಡಬೇಕಿತ್ತು. ಅಲ್ಲಿ ನಿಲ್ಲುತ್ತಿದ್ದ ಗಾಡಿಗಳಲ್ಲಿ ಮೊದಲ ಆಯ್ಕೆ ಸಲಾಮನ ಗಾಡಿ… ಕುದುರೆಯೆಂದರೆ ಸದಾ ಕಣ್ಮುಂದೆ ಬರುವ ಮಿರುಗುತ್ತಿದ್ದ ಕಂದು ಬಣ್ಣದ ಕುದುರೆ; ಹಸಿರು ಬಣ್ಣದ ಗಾಡಿಗೆ ಕೆಂಪಂಚಿನ ಮೇಲೆ ಚಿತ್ತಾರದ ಹೂಗಳು; ಗಾಡಿಯೊಳಗೆ ಹುಲ್ಲಿನ ಮೇಲೆ ಹಾಸಿದ್ದ ಗೋಣಿ ತಾಟು; ಅದರ ಮೇಲೊಂದು ಪುಟ್ಟ ಜಮಖಾನ ನಮ್ಮ ಸಲಾಮನ ರಥ. ಸಲಾಂ ನಮ್ಮಮ್ಮನ ಪರಮ ಶಿಷ್ಯರಲ್ಲೊಬ್ಬನಾಗಿದ್ದ. ಸರಿ; ಈಗ ನಮ್ಮ ಸಂಕ್ರಾಂತಿಗೆ ಮತ್ತೆ ಬರೋಣ. ಎಳ್ಳು, ಸಕ್ಕರೆ ಅಚ್ಚನ್ನು ತಯಾರಿಸಿಕೊಂಡಾದ ಮೇಲೆ ಮತ್ತೆ ಸಲಾಮನ ಗಾಡಿಯ ವಿಷಯಕ್ಕೆ ಬರೋಣ. ಹೆಂಗಸರಿಗಂತೂ ಈ ಹಬ್ಬ ಬಂದರೆ ಅದೆಷ್ಟು ಸಂಭ್ರಮವೋ.. ಹೊಸವರ್ಷ ಆರಂಭವಾಗುವಾಗಲೆ ಮನೆಗೆ ತರುವ ತಿಂಗಳ ದಿನಸಿ ಸಾಮಾನಿನ ಪಟ್ಟಿಯಲ್ಲಿ ಸಕ್ಕರೆ, ಬೆಲ್ಲ, ಹುರಿಗಡಲೆ, ಕಡಲೇ ಬೀಜ, ಕೊಬ್ಬರಿ ಮತ್ತು ಎಳ್ಳು ತಮ್ಮ ಹೆಸರನ್ನು ಬರೆಸಿಕೊಂಡು ಬಿಡುತ್ತಿದ್ದವು. ಜನವರಿ ಹದಿನಾಲ್ಕರಂದು ಇಲ್ಲವೇ ಹದಿನೈದರಂದು ಬರುವ ಸಂಕ್ರಾತಿ ಹಬ್ಬಕ್ಕೆ ಎರಡು ವಾರ ಮೊದಲೇ ಭರದಿಂದ ಸಿದ್ಧತೆಗಳು ಆರಂಭವಾಗುತ್ತಿದ್ದವು. ಆಗೆಲ್ಲಾ ಈಗಿನಷ್ಟು ಬೆಳ್ಳಗಿರುವ ಬೆಲ್ಲ ಸಿಗುತ್ತಿರಲಿಲ್ಲ. ಇರುವುದರಲ್ಲಿ ಬೆಳ್ಳಗಿರುವ ಬೆಲ್ಲವನ್ನು ಹುಡುಕಿಕೊಂಡು ಹೋಗಿ ತರಬೇಕಿತ್ತು. ಹೆಚ್ಚುವುದಕ್ಕೆ ಅಚ್ಚು ಬೆಲ್ಲವೇ ಸರಿ; ಹಿಡಿತಕ್ಕೂ ಸಿಗುತ್ತಿತ್ತು; ಹೆಚ್ಚು ಪುಡಿಯೂ ಆಗುತ್ತಿರಲಿಲ್ಲ. ಕೆಲವರು ಬೆಳ್ಳಗೆ ಕಾಣಬೇಕೆಂದು (ಅಥವಾ ಆ ರುಚಿಯೇ ಅವರಿಗೆ ಇಷ್ಟವಾಗುತ್ತಿತ್ತೇನೋ) ಬೆಲ್ಲದ ಬದಲು ಸಕ್ಕರೆಯ ಪಾಕವನ್ನು ತಟ್ಟೆಗೆ ಹೊಯ್ದು, ಕತ್ತರಿಸಿ ಎಳ್ಳಿನ ಮಿಶ್ರಣಕ್ಕೆ ಬೆರಸುತ್ತಿದ್ದರು. ಕೊಬ್ಬರಿ ವಿಪರೀತ ಗಟ್ಟಿ ಇರಬಾರದು; ಹೆಚ್ಚಲು ಅನುವಾಗುವಂತೆ ಸ್ವಲ್ಪ ಮೆತ್ತಗಿರಬೇಕು; ಬೆಳ್ಳಗಿರಬೇಕು; ಮುಗ್ಗುಲು ವಾಸನೆಯಾಗಲೀ, ಕೆಂಬಣ್ಣವಾಗಲೀ ಸಂಪೂರ್ಣವಾಗಿ ವರ್ಜ್ಯ. ಹೆಚ್ಚಿದ ನಂತರ ಬೆಲ್ಲ, ಕೊಬ್ಬರಿ ಎರಡೂ ಗರಿಗರಿಯಾಗುವ ಹಾಗೆ ಐದಾರು ದಿನ ಬಿಸಿಲಲ್ಲಿ ಒಣಗಬೇಕು. ಕಡಲೇ ಬೀಜವನ್ನು ಹುರಿಯುವುದೂ ಒಂದು ನಾಜೂಕಿನ ವಿಷಯವೇ. ಮಂದ ಉರಿಯಲ್ಲಿ ಬಿಡದೇ ಕೈಯಾಡುತ್ತಾ ಹುರಿಯಬೇಕು. ಇಲ್ಲವಾದರೆ ಸೀಯುವ ಕಾಳುಗಳು ಅಧಿಕ. ಸೀಯದಂತೆ ಕಾಪಾಡಲು ಕೆಲವರು ಮರಳನ್ನು ಚೆನ್ನಾಗಿ ತೊಳೆದು ಒಣಗಿಸಿಕೊಂಡು ಅದರ ಜೊತೆಯಲ್ಲಿ ಕಡಲೇಬೀಜವನ್ನು ಹಾಕಿ ಹುರಿದು ಜರಡಿಯಾಡಿ ತೆಗೆದುಕೊಳ್ಳುತ್ತಿದ್ದರು. ಈ ರೀತಿ ಹುರಿದದ್ದು ಒಂದೇ ಸಮನಾಗಿ ಹದವಾಗಿ ಬಾದಾಮಿಯ ಬಣ್ಣಕ್ಕೆ ಬರುತ್ತಿತ್ತು; ರುಚಿಯೂ ಉತ್ಕೃಷ್ಟವಾಗಿರುತ್ತಿತ್ತು. ನಮ್ಮ ಮನೆಯ ಬಳಿಯಿದ್ದ ಅಯ್ಯಂಗಾರರ ಮನೆಯಲ್ಲಿ ಕಾಫಿ ಬೀಜ ಹುರಿಯುವ ಒಲೆ ಇತ್ತು. ಒಂದು ಇಜ್ಜಿಲು ಒಲೆಯ ಮೇಲೆ ಅಡ್ಡಡ್ಡವಾಗಿ ಸಿಲೆಂಡರಿನಾಕಾರದ ಒಂದು ಮುಚ್ಚುಳವಿರುವ, ಹಿಡಿಕೆಯಿರುವ ಡಬ್ಬಿ; ಅದು ಒಲೆಯ ಕೆಂಡದ ಮೇಲೆ ಒಂದು ಅಂತರದಲ್ಲಿ ಕೂರುವಂತ ವ್ಯವಸ್ಥೆ. ಅದರೊಳಗೆ ಕಡಲೆಬೀಜವನ್ನು ತುಂಬಿ ಒಲೆಯ ಮೇಲಿಟ್ಟು ಹಿಡಿಕೆಯನ್ನು ತಿರುಗಿಸುತ್ತಿದ್ದರೆ ಆ ಡಬ್ಬಿ ಸುತ್ತುತ್ತಾ ಒಂದೇ ಹದದಲ್ಲಿ ಶಾಖವನ್ನು ಪಡೆದುಕೊಂಡು ಹದವಾಗಿ ಹುರಿದುಕೊಳ್ಳುತ್ತಿತ್ತು. ಇಂತಹ ಯಾವುದಾದರೂ ಒಂದು ರೀತಿಯಲ್ಲಿ ಕಡಲೇಕಾಯನ್ನು ಹುರಿದ ನಂತರ ಅದನ್ನು ಶುಭ್ರವಾದ ಒಂದು ಗೋಣಿ ಚೀಲದ ಮೇಲೆ ಹರಡಿಕೊಂಡು, ಅದರ ಮೇಲೆ ಮರದ ಮಣೆಯನ್ನು ಇಟ್ಟು ಉಜ್ಜಿದರೆ ಕಾಳುಗಳು ಸಿಪ್ಪೆಯನ್ನು ಬಿಟ್ಟುಕೊಂಡು ಬೇಳೆಗಳಾಗಿ ಒಡೆದುಕೊಳ್ಳುತ್ತಿದ್ದವು. ಆಮೇಲೆ ಅದನ್ನು ಮರದಲ್ಲಿ ಕೇರಿ, ಸಿಪ್ಪೆಯನ್ನೂ ನೂಕನ್ನೂ ತೆಗೆದು ಕೆಟ್ಟುಹೋದ, ಚೂರುಚೂರಾದ, ಸೀದುಹೋದ ಕಾಳುಗಳನ್ನೆಲ್ಲಾ ಆರಿಸಿ ತೆಗೆದು ಹಸನು ಮಾಡಬೇಕಿತ್ತು. ಈ ಕೆಲಸಕ್ಕೆ ನಾವು ಮಕ್ಕಳೆಲ್ಲಾ ಅತ್ಯಂತ ಉತ್ಸುಕರಾಗಿ ಸಹಾಯ ಮಾಡುತ್ತಿದ್ದೆವು. ಒಡೆದ, ಸ್ವಲ್ಪ ಸೀದ ಕಾಳುಗಳೆಲ್ಲಾ ನಮ್ಮ ಹೊಟ್ಟೆಗೇ ತಾನೆ! ಹಾಗಾಗಿ ಅಲ್ಪ ಸ್ವಲ್ಪ ಮುಕ್ಕಾದ ಕಾಳುಗಳಿಗೂ ಎಳ್ಳಿನೊಂದಿಗೆ ಬೆರೆಯುವ ಸೌಭಾಗ್ಯವಿರುತ್ತಿರಲಿಲ್ಲ. ಹುರಿಗಡಲೆಯಾದರೂ ಅಷ್ಟೇ ಹುರಿಯುವ ಕೆಲಸವೊಂದು ಇರುತ್ತಿರಲಿಲ್ಲ. ಹೀಗೆ ಆರಿಸುವಾಗ ಇನ್ನೂ ಸಿಪ್ಪೆಯಿಟ್ಟುಕೊಂಡ ಕಾಳುಗಳು, ಒಡೆದವು, ಕಡೆಗೆ ಸ್ವಲ್ಪ ಸೀಳಿಕೊಂಡವು ಕೂಡಾ ನಮ್ಮ ನೈವೇದ್ಯಕ್ಕೇ! ಆರಿಸುವಾಗ ಎಂಜಲು ಮಾಡಿಕೊಂಡು ತಿನ್ನಬಾರದು; ಎಲ್ಲವನ್ನೂ ಒಂದು ತಟ್ಟೆಗೋ, ಬಟ್ಟಲಿಗೋ ಹಾಕಿಕೊಂಡು ನಂತರ ತಿನ್ನಬಹುದು ಎನ್ನುವ ಅಮ್ಮನ ನಿಬಂಧನೆಗೆ, ಯಾವ ಪ್ರತಿರೋಧವೂ ಇಲ್ಲದೆ ಒಪ್ಪಿಕೊಂಡು ನಮಗೆ ಸಾಕೆನಿಸುವಷ್ಟು ಸರಕು ಸಿಕ್ಕ ತಕ್ಷಣ ಕೆಲಸ ಸಾಕಾಯಿತೆಂದು ಎದ್ದೋಡುತ್ತಿದ್ದೆವು. ಎಷ್ಟನ್ನು ಮಾಡಿಕೊಟ್ಟಿದ್ದರೆ ಅಷ್ಟೇ ಅಮ್ಮನ ಪುಣ್ಯ! ಎಳ್ಳನ್ನು ಶುದ್ಧಮಾಡುವುದೂ ಎರಡು ದಿನದ ಕೆಲಸವೇ. ಹಿಂದಿನ ದಿನವೇ ಎಳ್ಳನ್ನು ನೀರಿನಲ್ಲಿ ನೆನೆಯಿಟ್ಟು, ಮಾರನೆಯ ದಿನ ಬೆಳಗಿನ ಕೆಲಸವನ್ನೆಲ್ಲ ಮುಗಿಸಿಕೊಂಡು ಒಂದು ಶುಭ್ರವಾದ ಗೋಣಿಯ ಮೇಲೆ ನೆಂದ ಎಳ್ಳನ್ನು ಸ್ವಲ್ಪ ಸ್ವಲ್ಪವನ್ನೇ ಹಾಕಿಕೊಳ್ಳುತ್ತಾ ಅದು ಬೆಳ್ಳಗಾಗುವ ತನಕ ಉಜ್ಜುತ್ತಿದ್ದರು. ಎಳ್ಳು ಎಷ್ಟು ಬೆಳ್ಳಗಾಗಿದೆ ಎನ್ನುವುದರ ಮೇಲೆ ಉಜ್ಜುವವರ ಕಲಾನೈಪುಣ್ಯ ನಿರ್ಧಾರವಾಗುತ್ತಿತ್ತು. ಎಷ್ಟೋ ಜನರು ಕರಿಎಳ್ಳನ್ನು ಉಜ್ಜಿ ಬೆಳ್ಳಗೆ ಮಾಡಿರುವುದನ್ನೂ ನೋಡಿದ್ದೇನೆ. ಹೀಗೆ ಉಜ್ಜಿದ ಎಳ್ಳಿನ ಸಿಪ್ಪೆಯನ್ನೆಲ್ಲಾ ಕೇರಿ ಆರಿಸಿ ನಂತರ ಮಂದ ಉರಿಯ ಮೇಲೆ ಬಾಣಲೆಯ ಮೇಲೆ ಸ್ವಲ್ಪ ಸ್ವಲ್ಪವನ್ನೇ ಹಾಕಿಕೊಂಡು, ಹೊಸ ಪೊರಕೆ ಕಡ್ಡಿಯನ್ನು ಮಧ್ಯಭಾಗಕ್ಕೆ ಕಟ್ಟಿಕೊಂಡು, ಕಡ್ಡಿಯ ಕಡೆಯ ಭಾಗದಿಂದ ಅದನ್ನು ಘಮ್ಮೆನ್ನುವ ಹಾಗೆ, ಹದವಾಗಿ ಹುರಿಯುತ್ತಿದ್ದರು. ಹೀಗೆ ವಾರ, ಹತ್ತು ದಿನದ ಶ್ರಮದ ನಂತರ ಸಂಕ್ರಾಂತಿ ಎಳ್ಳು ತಯಾರಾಗುತ್ತಿತ್ತು. ಯಾರ ಮನೆಯ ಎಳ್ಳು ಬಂದರೂ ಅದರ ಬಣ್ಣ, ರುಚಿ, ವಾಸನೆಗಳ ಮೌಲ್ಯಮಾಪನವಾಗಿ ಅವರ ಪರಿಶ್ರಮವು ವಿಮರ್ಶೆಗೆ ಒಳಗಾಗುತ್ತಿತ್ತು! ಪೂರ್ತಿ ತಯಾರಾಗಿರುವ ಮಿಶ್ರಣ, ಇಲ್ಲವೇ ಅಭಿರುಚಿಗೆ ತಕ್ಕಂತೆ ಬೆರೆಸಿಕೊಳ್ಳಲು ಸಿದ್ಧಪಡಿಸಿದ ವಸ್ತುಗಳು ಸಿಗುತ್ತಿರುವ ಈ ದಿನಗಳಲ್ಲಿ ಅಂದಿನ ಕಷ್ಟವೂ ಇಲ್ಲ; ಸಂಭ್ರಮವೂ ಇಲ್ಲ ಬಿಡಿ. ಇನ್ನು ಸಕ್ಕರೆ ಅಚ್ಚನ್ನ ತಯಾರಿಸುವುದಂತೂ ಒಂದು ದೊಡ್ಡ ಕಲೆಯೇ. ಪರಿಶ್ರಮವೂ ಬಹಳ. ಹಳಕುಹಳಕಾದ ಸಕ್ಕರೆಯನ್ನು ಅದು ಮುಳುಗುವಷ್ಟೇ ನೀರಿನಲ್ಲಿ ನೆನೆಯಿಟ್ಟು ನಂತರ ಅದನ್ನು ಕುದಿಸಿ, ಕುದಿಯುತ್ತಿರುವಾಗ ಒಮ್ಮೆ ಹಾಲು ಹಾಕಿ ಅದನ್ನು ಬೆಳ್ಳಗಿರುವ ಪಂಚೆಯ ಬಟ್ಟೆಯಲ್ಲಿ ಶೋಧಿಸಿಕೊಂಡು, ನಂತರ ಇನ್ನೊಮ್ಮೆ ಮೊಸರು ಹಾಕಿ ಕುದಿಸಿ ಶೋಧಿಸಿದ ಮೇಲೆ ಪಾಕ ಎಷ್ಟು ಬೆಳ್ಳಗಾಯಿತೆಂಬುದರ ಮೇಲೆ ಇನ್ನೊಮ್ಮೆ ಕುದಿಸಿ ಶುಚಿಮಾಡಬೇಕೇ ಎನ್ನುವುದು ನಿರ್ಧಾರವಾಗುತ್ತಿತ್ತು. ಅಟ್ಟದ ಮೇಲಿಟ್ಟಿದ್ದ ಮರದ ಅಚ್ಚುಗಳನ್ನು ಹಿಂದಿನ ದಿನವೇ ಚೆನ್ನಾಗಿ ತೊಳೆದು ನೀರಿನಲ್ಲಿ ನೆನೆಯಲು ಬಿಡುತ್ತಿದ್ದರು. ಇನ್ನು ಅಚ್ಚು ಹಾಕುವ ಕಾರ್ಯಕ್ರಮಕ್ಕಂತೂ ಕನಿಷ್ಟ ಇಬ್ಬರಾದರೂ ಬೇಕೇ ಬೇಕು. ನಾಲ್ಕೈದು ಜನ ಸೇರಿದರೆ ಕೆಲಸ ಸುಲುಭ. ಹಾಗಾಗಿ ಅಕ್ಕಪಕ್ಕದವರೆಲ್ಲಾ ಸೇರಿಕೊಂಡು ಸಂತೋಷವಾಗಿ, ಸಹಕಾರಿ ಮನೋಭಾವದಿಂದ ಮಾಡುತ್ತಿದ್ದುದೇ ಹೆಚ್ಚು. ಶುದ್ಧವಾದ ಪಾಕವನ್ನು ಒಂದೋ ಎರಡೋ ಸೌಟನ್ನು ಒಂದು ತಪ್ಪ ತಳದ ಪಾತ್ರೆಗೆ ಹಾಕಿಕೊಂಡು ಪುಟ್ಟ ಇಜ್ಜಿಲ ಒಲೆಯ ಮೇಲೋ, ಇಲ್ಲವೇ ಬತ್ತಿಯ ಸೀಮೆಣ್ಣೆಯ ಸ್ಟೌವ್ ಮೇಲೋ ಬಿಸಿ ಮಾಡುತ್ತಾ, ಆಗಾಗ ಪಾಕದ ಹದ ನೋಡುತ್ತಾ, ಪಾಕ ಸೌಟಿನಿಂದ ಪಾತ್ರೆಯವರೆಗೆ ಒಂದು ನೂಲಿನಂತೆ ನಿಂತರೆ ಅದು ಪಾಕದ ಸರಿಯಾದ ಹದ. ತಕ್ಷಣ ಅದನ್ನು ಕಂಚಿನ ಬೋಗುಣಿಗೆ ಸುರಿದುಕೊಂಡು ಸಿದ್ಧಮಾಡಿಟ್ಟುಕೊಂಡಿದ್ದ ಇನ್ನೊಂದು ಒಬ್ಬೆ ಪಾಕವನ್ನು ಒಲೆಯ ಮೇಲಿಟ್ಟು, ಬೋಗುಣಿಯಲ್ಲಿದ್ದ ಪಾಕವನ್ನು ಸೌಟಿನಿಂದ ತಿಕ್ಕುತ್ತಾ ಅದು ಮಂದ ಬಿಳಿಛಾಯೆಗೆ ತಿರುಗಿದೊಡನೆ, ನೀರಿನಿಂದ ಹೊರತೆಗೆದು ಮಲ್ ಪಂಚೆಯ ಬಟ್ಟೆಯಲ್ಲಿ ಒರೆಸಿ ಜೋಡಿಸಿ ದಾರ ಕಟ್ಟಿಯೋ, ರಬ್ಬರ್ ಬ್ಯಾಂಡ್ ಹಾಕಿಕೊಂಡೋ ತಯಾರಾಗಿ ಮಣೆಯ ಮೇಲೆ ಕುಳಿತಿರುತ್ತಿದ್ದ ಅಚ್ಚಿನ ಬಾಯಿಗೆ ನಾಜೂಕಾಗಿ ಸುತ್ತಲೂ ಚೆಲ್ಲದಂತೆ, ಹಾಗೆ ಸುರಿಯುವಾಗ ಪಾಕ ಪೂರ್ತಿಯಾಗಿ ಒಳಸೇರುವಂತೆ ಕುಟ್ಟಿ ಕುಟ್ಟಿ ಅದು ತುಂಬುವಷ್ಟು ಪಾಕವನ್ನು ತುಂಬಿಸುವುದು ಜಾಣತನದ ಕಲೆಯೇ. ಅದು ಒಣಗಿದ ಮೇಲೆ ಮೇಲಿನ ಹೆಚ್ಚಿನ ಭಾಗವನ್ನು ಹೆರೆದು, ಅದರ ಕಟ್ಟನ್ನು ಬಿಚ್ಚಿ ನಾಜೂಕಾಗಿ ಹಿಡಿದುಕೊಂಡು, ಎಚ್ಚರಿಕೆಯಿಂದ ಅಚ್ಚಿನಿಂದ ಬಿಡಿಸಿ ತಟ್ಟೆಯ ಮೇಲಿರಿಸಿದರೆ ಅಲ್ಲಿಗೆ ಅದರ ಕೆಲಸ ಸಂಪೂರ್ಣ. ಕೆಲವೊಮ್ಮೆ ಕೋಳಿಯ ಕಾಲೋ, ಬಸವನ ಮೂತಿಯೋ, ಮೀನಿನ ಬಾಲವೋ ಮುರಿದು ಕೈಗೆ ಬರುತ್ತಿತ್ತು. ಆಗ ತಕ್ಷಣವೇ ತಿಕ್ಕುತ್ತಿದ್ದ ಬಿಸಿ ಪಾಕದಲ್ಲಿ ಅದರ ಅಂಟಿಕೊಳ್ಳಬೇಕಿರುವ ಭಾಗವನ್ನು ಸ್ವಲ್ಪ ಅದ್ದಿ ಇನ್ನೊಂದು ಭಾಗಕ್ಕೆ ಅಂಟಿಸಿ, ಹಾಗೆಯೇ ಇಟ್ಟುಕೊಂಡಿದ್ದು, ಸ್ವಲ್ಪ ಅಂಟಿಕೊಂಡ ನಂತರ ತಟ್ಟೆಯ ಮೇಲೆ ಕೆಲಕಾಲ ಮಲಗಿಸಿದರೆ ಶಸ್ತ್ರಕ್ರಿಯೆಯಾದ ರೋಗಿ ಆರೋಗ್ಯವಂತನಾಗಿ ಏಳುವಂತೆ, ಸ್ವಲ್ಪ ಕಾಲದ ನಂತರ ಎದ್ದು ನಿಲ್ಲಲು ಶಕ್ತವಾಗುತ್ತಿದ್ದವು. ಈ ಶಸ್ತ್ರಕ್ರಿಯೆ ವಿಫಲವಾದರೆ ಕೋಳಿ, ಮೀನು, ಮಂಟಪ, ಜಿಂಕೆಗಳೆಲ್ಲಾ ಸುತ್ತಲೂ ಬಕಗಳಂತೆ ಕಾಯುತ್ತಿದ್ದ ಮಕ್ಕಳ ಬಾಯಿ ಪಾಲಾಗುತ್ತಿದ್ದವು! ಮಣೆಯ ಮೇಲೆ ಅಲ್ಪ ಸ್ವಲ್ಪ ಚೆಲ್ಲಿದ್ದ ಪಾಕ ಮತ್ತು ಮಕ್ಕಳ ಬಾಯಿಗೆ ಬೀಳದೆ ಉಳಿದುಕೊಂಡಿದ್ದ ತುಂಡುಗಳು ಬಣ್ಣವನ್ನು ಬೆರೆಸಿಕೊಂಡು ಮತ್ತೊಮ್ಮೆ ಜನ್ಮ ತಾಳುತ್ತಿದ್ದವು. ಒಂದೇ ಅಚ್ಚಿನಲ್ಲಿ ಎರಡು ಮೂರು ಬಣ್ಣದ ಪಾಕವನ್ನು ಸುರಿದು ಬಣ್ಣ ಬಣ್ಣವಾದ ಸಕ್ಕರೆಗೊಂಬೆಗಳನ್ನು ಮಾಡುವ ಪ್ರವೀಣರೂ ಇದ್ದರು! ಇದೇ ಸಕ್ಕರೆ ಪಾಕವನ್ನು ಉಪಯೋಗಿಸಿಕೊಂಡು ಬಾಣಲೆಗೆ ಎಳ್ಳನ್ನೋ, ಸೀಮೇ ಅಕ್ಕಿಯನ್ನೋ ಸ್ವಲ್ಪ ಹಾಕಿಕೊಂಡು, ಸ್ವಲ್ಪ ಸ್ವಲ್ಪವಾಗಿ ಅದಕ್ಕೆ ಸಕ್ಕರೆ ಪಾಕವನ್ನು ಹಾಕಿಕೊಳ್ಳುತ್ತಾ ಎಳ್ಳನ್ನು ಹುರಿಯುವ ಹಾಗೆ ನಿಧಾನವಾಗಿ ಹುರಿಯುತ್ತಾ ಕುಸುರೆಳ್ಳನ್ನೂ ಕೆಲವರು ಮಾಡುತ್ತಿದ್ದರು. ಹಾಗೆಯೇ ಇದೇ ಪಾಕವನ್ನು ಚೆನ್ನಾಗಿ ಉಜ್ಜಿ ಬೆಣ್ಣೆಯ ಉಂಡೆಯಂತೆ ಮಾಡಿಕೊಂಡು ಅದರಲ್ಲಿ ಮಣಿಗಳನ್ನು ಮಾಡಿ, ಅದನ್ನು ರಸ್ತು ಗುಂಡಿನೊಡನೆ ಪೋಣಿಸಿ, ಸರವನ್ನು ಮಾಡುತ್ತಿದ್ದರು. ಸಂಜೆ ಅದನ್ನು ಎಳೆಯ ಮಕ್ಕಳ ಕೊರಳಿಗೆ ಹಾಕಿ, ಕಬ್ಬಿನ ತುಂಡು, ಬೋರೆ ಹಣ್ಣು (ಎಲಚಿ ಹಣ್ಣು) ಮತ್ತು ಕಾಸನ್ನು ಸೇರಿನ ತುಂಬಾ ತುಂಬಿಸಿ ಅದನ್ನು ಮಕ್ಕಳ ತಲೆಯ ಮೇಲೆ ಎರೆದು ಆರತಿ ಮಾಡುವ ಪದ್ಧತಿಯೂ ಕೆಲವರಲ್ಲಿ ಇತ್ತು. ಇಡೀ ಸೇರಿಗೆಲ್ಲಾ ಒಂದೆರಡು ರೂಪಾಯಿನಷ್ಟು ಚಿಲ್ಲರೆ ಕಾಸುಗಳಿದ್ದರೂ ಅದು ಬೀಳುವುದೇ ತಡ ಎಲ್ಲರೂ ಅದನ್ನು ಬಾಚಿಕೊಂಡು ಸಂಭ್ರಮಿಸುತ್ತಿದ್ದುದೇ ಒಂದು ಚಂದ! ಈಗ ಮತ್ತೆ ನಮ್ಮ ಸಲಾಮನ ವಿಚಾರಕ್ಕೆ ಬರೋಣ. ಎಳ್ಳು, ಸಕ್ಕರೆ ಅಚ್ಚು ಮಾಡಿದರಷ್ಟೇ ಆಗಲಿಲ್ಲ; ಅದನ್ನು ಮಾಡುವುದೇ ಬಾಳೆಹಣ್ಣು ಮತ್ತು ಕಬ್ಬಿನೊಂದಿಗೆ ಬಂಧು, ಬಳಗ, ನೆಂಟರಿಷ್ಟರು, ಸ್ನೇಹಿತರ ಮನೆಗೆ ಹೋಗಿ ಬೀರುವುದಕ್ಕೆ. ಅಕ್ಕಪಕ್ಕದ ಮನೆಗಳಿಗೇನೋ ಹೋಗಿ ಬೀರಿ ಬರಬಹುದು. ದೂರದೂರದ ಮನೆಗಳಿಗೆ ನಡೆದುಕೊಂಡು ಹೋಗುವುದಾದರೆ ಅದೇ ಸಂಜೆಯಲ್ಲಿ ಎಲ್ಲರ ಮನೆಗೂ ಹೋಗಿ ಪೂರೈಸಲು ಸಾಧ್ಯವಿಲ್ಲ. ಹಾಗಾಗಿ ಆದಿನ ನಮಗೆ ಸಲಾಮನ ಗಾಡಿಯ ರಥಯಾತ್ರೆ! ನಮ್ಮಮ್ಮ ಎಲ್ಲಿಗೆ ಹೋಗಬೇಕಾದರೂ ಹೆಚ್ಚಾಗಿ ಅವನ ಗಾಡಿಯಲ್ಲೇ ಹೋಗುತ್ತಿದ್ದುದರಿಂದ, ಅವನಿಗೆ ನಮ್ಮ ಬಂಧು, ಬಳಗ, ಗುರುತು ಪರಿಚಯದವರೆಲ್ಲರ ಮನೆಯೂ ಗೊತ್ತಿತ್ತು. ಆದಿನ ಮದ್ಯಾನ್ಹ ನಾಲ್ಕು ಗಂಟೆಯ ಒಳಗಾಗಿ ಬರುವಂತೆ ಅಮ್ಮ ಅವನಿಗೆ ಮೊದಲೇ ಹೇಳಿಟ್ಟಿರುತ್ತಿದ್ದರು. ಅಂತೆಯೇ ಅವನು ಬಂದಾಗ ನಮ್ಮನ್ನು ಕರೆದುಕೊಂಡು ಹೋಗಬೇಕಾದ ಒಂದು ಇಪ್ಪತ್ತೈದು, ಮೂವತ್ತು ಮನೆಗಳನ್ನು ಹೇಳುತ್ತಿದ್ದರು. ಆರು ವರ್ಷದ ನಾನು, ನಾಲ್ಕು ವರ್ಷದ ನನ್ನ ತಂಗಿ ಇಬ್ಬರನ್ನೇ

ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ Read Post »

ಇತರೆ

ಇನ್ವಿಕ್ಟಸ್ ಮತ್ತು ಮಂಡೇಲಾ

ಲೇಖನ ಇನ್ವಿಕ್ಟಸ್ ಮತ್ತು ಮಂಡೇಲಾ ರಶ್ಮಿ ಹೆಗಡೆ ಮುಂಬೈ ಕೆಲವರ ವ್ಯಕ್ತಿತ್ವ ಹಾಗೂ ಸ್ಪೂರ್ತಿದಾಯಕ ಮಾತುಗಳು,ಸಾಧಕರ ಜೀವನಗಾಥೆಗಳು,ಕೆಲವು ಪುಸ್ತಕಗಳು,ಇನ್ನು ಕೆಲವು ಕಾವ್ಯಗಳು ನಮಗೆ ಗುರುವಾಗಿ,ಆದರ್ಶದ ಚಿಲುಮೆಗಳಾಗಿ ಜೀವನದುದ್ದಕ್ಕೂ ಪ್ರೇರೇಪಿಸುತ್ತವೆ. ಕೆಲವು ಕಾವ್ಯಗಳಂತೂ ಉತ್ಕೃಷ್ಟತೆಯ ಎಲ್ಲೆಯನ್ನು ಮೀರಿ ಬೆಳೆಯುತ್ತವೆ. ಬದುಕಿನ ಅಂಕುಡೊಂಕಿನ ದಾರಿಯಲ್ಲಿ  ಹಾದಿ ತಪ್ಪದಂತೆ ಮುನ್ನಡೆಸಿ,ಸಂಕಟದ ಸಮಯದಲ್ಲಿ ಧೈರ್ಯ,ನೆಮ್ಮದಿ ನೀಡಿ ಚಿಕಿತ್ಸೆಯ ರೂಪದಲ್ಲಿ ಕಾಪಾಡುತ್ತವೆ. ಉತ್ಕೃಷ್ಟವಾದ ಸಾಹಿತ್ಯ ಹಾಗೂ ಪುಸ್ತಕಗಳು ಮನುಷ್ಯನ ಯೋಚನಾಲಹರಿಯನ್ನೇ ಬದಲಿಸಬಲ್ಲದು. ಶಬ್ದಗಳು ಖಡ್ಗಕ್ಕಿಂತ ಹರಿತವಾದದ್ದು ಎನ್ನುವುದು ಸತ್ಯ. ಹೀಗೆಯೇ ಒಂದು ಪುಸ್ತಕ ಒಬ್ಬ ವ್ಯಕ್ತಿಯ ಜೀವನದಲ್ಲಿ ಎಷ್ಟರ ಮಟ್ಟಿಗೆ ಪ್ರಭಾವ ಬೀರಬಲ್ಲದು ಎನ್ನುವುದಕ್ಕೆ ಇಲ್ಲಿದೆ ಒಂದು ಉದಾಹರಣೆ. ಕುರುಕ್ಷೇತ್ರ ಯುದ್ಧದಲ್ಲಿ ಅರ್ಜುನನಿಗೆ ಕೃಷ್ಣ ನೀಡಿದ ಗೀತೋಪದೇಶ ಆತನಿಗೆ ಶಕ್ತಿಯಾಗಿ ಯುದ್ಧದಲ್ಲಿ ಜಯಶಾಲಿಯನ್ನಾಗಿ ಮಾಡಿತ್ತು. ಅದೇ ಭಗವತ್ಗೀತೆ ಕಲಿಯುಗದಲ್ಲಿ ಮಹಾತ್ಮಾ ಗಾಂಧೀಜಿ,ಅನಿಬೆಸಂಟ್ ,ಸ್ವಾಮಿ ವಿವೇಕಾನಂದರಂಥ ಮಹಾನ್ ವ್ಯಕ್ತಿಗಳಿಗೆ ಸಾಧನೆಯತ್ತ ದಾರಿತೋರಿದ್ದು ತಿಳಿದ ವಿಷಯ. ಕನ್ನಡದ ಭಗವತ್ಗೀತೆ ಎಂದು ಕರೆಯಲ್ಪಡುವ ಡಿ ವಿ ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ವಂತೂ ಅದೆಷ್ಟು ಜನರ ಮನಸ್ಸಿಗೆ ನೆಮ್ಮದಿ ನೀಡಿದೆ ಎಂದು ಹೇಳತೀರದು. ಹೀಗೆಯೇ ಒಂದು ಕಾವ್ಯ ನೆಲ್ಸನ್ ಮಂಡೇಲಾ ಅವರ ಜೀವನಕ್ಕೆ ದಾರಿದೀಪವಾಗಿತ್ತು. ದಕ್ಷಿಣ ಆಫ್ರಿಕಾದಲ್ಲಿದ್ದ ವರ್ಣಭೇದ ನೀತಿ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿ,ಬಹುಜಾತಿ ಸಮಾನತೆಯ ಬಗ್ಗೆ ಸ್ವತಃ ಶಿಕ್ಷಣ ನೀಡಿದವರು ಮಂಡೇಲಾ. ಅವರು ತಮ್ಮ ಜೀವನದ ಕಾಲುಭಾಗಕ್ಕಿಂತ ಹೆಚ್ಚು ಸಮಯವನ್ನು,ಅಂದರೆ ಸತತವಾಗಿ ಇಪ್ಪತ್ತೇಳು ವರ್ಷ ವಿವಿಧ ಜೈಲುಗಳಲ್ಲಿಯೇ ಕಳೆದರು. 1961ರಲ್ಲಿ ವರ್ಣಭೇದ ಚಳುವಳಿ ಅಡಿಯಲ್ಲಿ ಮೊದಲಬಾರಿಗೆ ಬಂಧಿತರಾದ ಮಂಡೇಲಾರನ್ನು ಖುಲಾಸೆಗೊಳಿಸಿದ್ದರೂ,ಅಕ್ರಮವಾಗಿ ದೇಶತೊರೆದರೆಂಬ ಕಾರಣಕ್ಕೆ ದೋಷಿಯನ್ನಾಗಿಸಿ 1962ರಲ್ಲಿ ಮತ್ತೆ ಬಂಧಿಸಿ ಕೇಪ್ ಟೌನ್ ಹಾಗೂ ಟೇಬಲ್ ಮೊಂಟೆನಿನ ಸಮೀಪದ “ರಾಬಿನ್ ದ್ವೀಪ ಕಾರಾಗೃಹ”ದಲ್ಲಿ ಇರಿಸಲಾಯಿತು. ಹಾಸಿಗೆಯಂಥ  ಕನಿಷ್ಠ ಸೌಲಭ್ಯಗಳೂ ಇರದ ಚಿಕ್ಕದಾದ,ಸದಾ ಒದ್ದೆಯಾಗಿರುತ್ತಿದ್ದ ಕೋಣೆ. ಜೈಲಿನ ಬಿಳಿವರ್ಣೀಯ ಅಧಿಕಾರಿಗಳಿಂದ ಸತತವಾದ ದೈಹಿಕ ಹಾಗೂ ಮಾನಸಿಕ ಕಿರುಕುಳ,ಮಲಗಲು ಒಣ ಹುಲ್ಲಿನ ಚಾಪೆ. ಕೈದಿಗಳ ಮೇಲೆ ಒತ್ತಡ ಹೇರಿ ಗಣಿ ಕೆಲಸಮಾಡಿಸಿ, ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದ ಆ ಕಾರಾಗೃಹದಲ್ಲಿ ಅವರು ಕಳೆದಿದ್ದು ಸತತವಾಗಿ ಹದಿನೆಂಟು ವರ್ಷಗಳು. ಆರು ತಿಂಗಳಿಗೊಮ್ಮೆ ಮಾತ್ರ ಪತ್ರ ವ್ಯವಹಾರ ನಡೆಸುವುದಷ್ಟೇ ಅಲ್ಲದೆ, ವರ್ಷಕ್ಕೆ ಒಂದೇ ದಿನ,ಅದೂ ಸಹ ಅರ್ಧ ಘಂಟೆ ಮಾತ್ರ ಆಪ್ತರನ್ನು ಭೇಟಿಯಾಗುವ ಅವಕಾಶವಿತ್ತು. ಅಷ್ಟಾದರೂ ಅವರು ಧೃತಿಗೆಡಲಿಲ್ಲ. ಜೈಲಿನಲ್ಲಿಯೇ ಸಹ ಖೈದಿಗಳಲ್ಲೂ ಸ್ಫೂರ್ತಿ ತುಂಬಿ ನಾಗರಿಕ ಅಸಹಕಾರ ಚಳುವಳಿಯನ್ನು ಮುನ್ನಡೆಸಿದರು. ಇದು ದಕ್ಷಿಣ ಆಫ್ರಿಕಾದ ಅಧಿಕಾರಿಗಳನ್ನು ರಾಬಿನ್ ದ್ವೀಪದ ಪರಿಸ್ಥಿತಿಯನ್ನು ತೀವ್ರವಾಗಿ ಸುಧಾರಿಸುವಂತೆ ಒತ್ತಾಯಿಸಿತು. ಇದೇ ಕಾರಣಕ್ಕೆ ಅವರನ್ನು “ಪೋಲ್ಸ್ ಮೂರ್” ಜೈಲಿಗೆ, ಸ್ಥಳಾಂತರಿಸಿ ಅಲ್ಲಿನ ಒಂದು ಸಣ್ಣ ಕೋಣೆಯಲ್ಲಿ ಗೃಹಬಂಧನದಲ್ಲಿಟ್ಟರು. ಜೈಲಿನಲ್ಲಿದ್ದಾಗಲೇ ಅಂಚೆ ತರಬೇತಿ ಮೂಲಕ ಆಕ್ಸ್ಫರ್ಡ್ ನ ವೋಲ್ಸಿಹಾಲ್ ನಿಂದ ಎಲ್ ಎಲ್ ಬಿ ಪದವಿ ಪಡೆದರು. ಇಪ್ಪತ್ತೇಳು ವರ್ಷಗಳ ಸಮಯ ಹೊತ್ತುರಿಯುತ್ತಿದ್ದ ಹೋರಾಟದ ಕಿಚ್ಚನ್ನು ಮನಸಿನಲ್ಲಿ ಆರಲು ಬಿಡದೆ,ಕಾಪಾಡಿಕೊಂಡು ಹೋಗುವುದು ಸುಲಭವಲ್ಲ. ಈ ಅಸಾಧ್ಯವಾದುದನ್ನು ಸಾಧ್ಯವಾಗಿಸಿದ್ದು ಒಂದು ಕವಿತೆ  ಎಂದರೆ ಅತಿಶಯೋಕ್ತಿಯಾಗದು. ಜೈಲಿನಲ್ಲಿದ್ದಷ್ಟು ವರ್ಷ ಅವರ ಜೊತೆಯಾಗಿ,ಗುರುವಾಗಿ,ಸ್ಪೂರ್ತಿಯಾಗಿ ನಿಂತಿದ್ದು ಹದಿನೆಂಟನೇ ಶತಮಾನದ ಕವಿಯಾಗಿದ್ದ “ವಿಲಿಯಂ ಅರ್ನೆಸ್ಟ್ ಹೆನ್ಲೇ” ಅವರ ಕವನ ‘ಇನ್ವಿಕ್ಟಸ್’. ಲ್ಯಾಟಿನ್ ಭಾಷೆಯಲ್ಲಿ ಇದರರ್ಥ “ಅಜೇಯ”ಎಂದು.  ನೆಲ್ಸನ್ ಮಂಡೇಲಾರ ಜೀವನ ಚರಿತ್ರೆ ಆಧಾರಿತ ಸಿನಿಮಾಕ್ಕೂ ಸಹ ‘ಇನ್ವಿಕ್ಟಸ್’ ಎಂದೇ ಹೆಸರಿಡಲಾಗಿತ್ತು.  ಕೆಲವೇ ಸಾಲುಗಳುಳ್ಳ ಈ ಕವನ ಅವರ ಮೇಲೆ ಅಗಾಧವಾದ ಪರಿಣಾಮ ಬೀರಿತ್ತು. ತಮ್ಮ ಸಹಖೈದಿಗಳೆದುರೂ ಆ ಕವನವನ್ನು ವಾಚಿಸುತ್ತಿದ್ದ ಮಂಡೇಲಾ, ಕ್ರಮೇಣವಾಗಿ ಅವರಲ್ಲಿಯೂ ಆ ಕವಿತೆಯ ಮೂಲಕ ಹೊಸ ಸ್ಪೂರ್ತಿಯನ್ನು ತುಂಬಿದ್ದರು. ಜೈಲಿನ ಕಠಿಣ ಸಮಯದಲ್ಲೂ ಹೋರಾಟದ ಕಿಚ್ಚು ಆರದಂತೆ ಕಾಪಾಡಿಕೊಂಡು ಬಂದಿದ್ದು ಅದೇ ಪದ್ಯ. ಇನ್ವಿಕ್ಟಸ್ ಕವನದ ಕೊನೆಯ ಈ ಎರೆಡು ಸಾಲುಗಳು ಆತನಿಗೆ ಅತ್ಯಂತ ಪ್ರಭಾವ ಬೀರಿದ್ದವು. “ನನ್ನ ಅದೃಷ್ಟದ ಮುಖ್ಯಸ್ಥ ನಾನು, ನನ್ನ ಆತ್ಮದ ನಾಯಕನು ನಾನು” ಎಂದು. “ಈ ಕವಿತೆಯು ನಾನು ವೈಯಕ್ತಿಕವಾಗಿ,ಪ್ರಪಂಚದಾದ್ಯಂತದ ಅನೇಕರೊಂದಿಗೆ ವ್ಯವಹರಿಸಿ,ಪಾಲಿಸಿದ ಅನುಭವ ಹಾಗೂ ಪದಗಳ ಸಂಗ್ರಹ”ಎಂದಿದ್ದರು. ಹೋರಾಡುವ ಧೈರ್ಯ ಸೋತು ಮಲಗುತ್ತಿದೆ ಎನಿಸಿದಾಗಲೆಲ್ಲ ಎಚ್ಚರಿಸಿ,ಧೈರ್ಯ ತುಂಬಿದ್ದು ಈ ಕವಿತೆ. ಒಂದು ಬರಹ ಒಬ್ಬ ವ್ಯಕ್ತಿ,,ಸಮಾಜ ಹಾಗೂ ದೇಶದ ಮೇಲೆ ಅದೆಷ್ಟು ಪರಿಣಾಮ ಬೀರಬಲ್ಲದೆಂಬುದಕ್ಕೆ ಇದೇ ಸಾಕ್ಷಿ. ಮಂಡೇಲಾ ಮುಂದೆ ದಕ್ಷಿಣ ಆಫ್ರಿಕಾದ ಅಧ್ಯಕ್ಷರಾಗಿದ್ದು ಇತಿಹಾಸ. ಮಹಾತ್ಮಾ ಗಾಂಧೀಜಿಯವರು ದಕ್ಷಿಣ ಆಫ್ರಿಕಾದಲ್ಲಿ ಮೊದಲು ವರ್ಣ ಭೇದ ನೀತಿಯ ವಿರುದ್ಧ ದನಿಯೆತ್ತಿದವರು. ಆ ಚಳುವಳಿಯನ್ನು ಅಲ್ಲಿ ಮುಂದುವರೆಸಿದ ಮಂಡೇಲಾರಿಗೆ ಆದರ್ಷವಾದವರೇ ಗಾಂಧೀಜಿ. ಇಪ್ಪತ್ತೇಳು ವರ್ಷದ ಕಾರಾಗೃಹ ಶಿಕ್ಷೆ ಮುಗಿಸಿಬಂದ ಮಂಡೇಲಾ ನಗುತ್ತಾ ಹೇಳಿದ್ದೇನು ಗೊತ್ತೇ? ” ಇಪ್ಪತ್ತೇಳು ವರ್ಷದ ಸುದೀರ್ಘ ರಜೆ ಇನ್ನು ಮುಗಿಯಿತು “ಎಂದು. ಭಾರತ ರತ್ನ,ಮಹಾತ್ಮಾ ಗಾಂಧಿ ಶಾಂತಿ ಪ್ರಶಸ್ತಿ,ನೊಬೆಲ್ ಶಾಂತಿ ಪುರಸ್ಕಾರಗಳಂತಹ ಅನೇಕ ಗೌರವಕ್ಕೆ ಪಾತ್ರರಾದ ಮಂಡೇಲಾ 2013 ರಂದು ತಮ್ಮ ಜೀವನ ಯಾತ್ರೆ ಮುಗಿಸಿ ಇಹಲೋಕಕ್ಕೆ ಪಯಣಿಸಿದರು. ಪುಸ್ತಕಗಳು ಅತ್ಯಂತ ಶಾಂತವಾದ ಸಲಹೆಗಾರರಷ್ಟೇ ಅಲ್ಲ,ಅವು ಸ್ಥಿರವಾದ ಸ್ನೇಹಿತರು ಕೂಡ. ಜೀವನದ ಎಲ್ಲಾ ಸಂಬಂಧಗಳು ನಮ್ಮಿಂದ ದೂರವಾದಾಗ ಸದಾ ಜೊತೆಗಿರುವ ಆತ್ಮೀಯ ಬಂಧುವೆಂದರೆ ಅದು ಪುಸ್ತಕ ಮಾತ್ರ. ಹಾಗೆಯೇ ನಾಲ್ಕೇ ಸಾಲುಗಳುಳ್ಳ ಒಂದು ಕವಿತೆ ಸಾವಿರ ಅನುಭವದ ವ್ಯಕ್ತಿಗೂ ಮೀರಿ ಪ್ರಭಾವ ಬೀರಬಲ್ಲದು. ************************************************************

ಇನ್ವಿಕ್ಟಸ್ ಮತ್ತು ಮಂಡೇಲಾ Read Post »

ಇತರೆ, ಲಹರಿ

ಎದಿಹಿಗ್ಗು ಕಡೆತನಕ.

ಭಾವಲಹರಿ. ಎದಿಹಿಗ್ಗು ಕಡೆತನಕ. ರಶ್ಮಿ .ಎಸ್. ಅಳಬಾರ್ದು ಅಂತ ನಿರ್ಧಾರ ಮಾಡೇನಿ ಅಕ್ಕ. ಆಮ್ಯಾಲೆ ಕಣ್ಣೀರು ತಂದಿಲ್ಲ. ಕಂಠ ಮೀರಿ ದುಖ್ಖಿಸಿಲ್ಲ. ಬಿಕ್ಕಿಲ್ಲ’. ‘ತ್ರಾಸು ಆಗ್ತದ. ಆದ್ರ ಅಳೂದ್ರಿಂದ ಸಂದರ್ಭ ಇರೂದಕ್ಕಿಂತ ಬ್ಯಾರೆ ಏನಾಗೂದಿಲ್ಲ. ಇಡೀ ಪರಿಸ್ಥಿತಿಯನ್ನಂತೂ ಬದಲಸಾಕ ಆಗೂದಿಲ್ಲ. ಅದಕ್ಕೆ ಅಳಬಾರ್ದು ಅಂತ ಮಾಡೇನಿ’. ನಮ್ಮ ಚಿಗವ್ವ ನಮ್ಮಮ್ಮಗ ಹೇಳ್ತಿದ್ಲು. ಮನಿ ಹಿತ್ತಲದಾಗ ಬೇವಿನ ಮರಕ್ಕ ಕಟ್ಟಿದ್ದ ಜೋಕಾಲಿಯೊಳಗ ತೂಗಕೊಂತ ಕುಂತ ಚಿಕ್ಕಮ್ಮ ಆಗಲೇ ೫ ದಶಕ ನೋಡ್ದಕ್ಕಿ. ನಮ್ಮಮ್ಮ ೬. ಬ್ಯಾಸಗಿ ಝಳ ತಾಕಲಾರ್ದ ಹಂಗ ಅಪ್ಪ ಹಿತ್ತಲದಾಗ ತೋಟ ಮಾಡ್ಯಾರ. ಅಲ್ಲಿ ತಣ್ಣಗೆ ಕುತ್ಗೊಂಡು ಕಷ್ಟ ಸುಖ ಮಾತಾಡೂ ಮುಂದ ನಾವು ಮಕ್ಕಳು ಇಬ್ಬರ ಮುಖ ಮಿಕಮಿಕ ನೋಡ್ಕೊಂತ ಸುಮ್ನಾಗಿದ್ವಿ. ಮೈ ಇಡೀ ಕಣ್ಣಾಗಿದ್ವು. ಕಿವಿಯಾಗಿದ್ವು. ಅಕ್ಕ–ತಂಗಿ ಇಬ್ರೂ ಕಷ್ಟ ಉಂಡು ಗಟ್ಟಿಯಾದೋರು. ಅಮ್ಮ ಅತ್ತು ಹಗುರಾಗ್ತೀನಿ ಅಂತಂದ್ರ, ಅತ್ರ ಮಂದಿಮುಂದ ಹಗುರಾಗ್ತೀವಿ ಅನ್ನೂ ನಂಬಿಕಿ ತಂಗೀದು. ಭಾಳ ತ್ರಾಸ ಆದ್ರ ಕಣ್ಣೀರಿನ ಮುತ್ತು ಗಲ್ಲಗುಂಟ ಇಳೀತಾವ. ಮುತ್ತಿನ ಮಣಿಯಂಥ ಬಣ್ಣ ನಮ್ಮ ಚಿಗ್ಗವ್ವಂದು. ಹಾಲಿನ ಕೆನಿ ಮ್ಯಾಲೆ ಹಬೆ ಇಬ್ಬನಿ ಕುಂತಂಗ ಕಾಣ್ತದ ಅವಾಗ. ಚಿಕ್ಕಮ್ಮ ಮಾತು ಮುಂದುವರಿಸಿದ್ರು.  ‘ಅಳೂದಂದ್ರ ಏನು? ನಾವು ನಮ್ಮ ದೌರ್ಬಲ್ಯವನ್ನು ತೋರಸೂದು. ನಾವು ನಂಬಿದ್ದು ಎಲ್ಲೊ ಖೊಟ್ಟಿ ಆಗೇದ ಅಂತ ತ್ರಾಸ ಮಾಡ್ಕೊಳ್ಳೂದು. ನಂಬಿದೆದಿಗೆ ಕಾಲ ನೀಡೂ ಪೆಟ್ಟು. ಅದು ಯಾವಾಗಲೂ ಎದಿ ಮುರದು ಬಿರದು ಬರೂಹಂಗ ಇರ್ತದ. ಈ ದುಃಖ್ಖದ್ದ ಕಟ್ಟಿ ಮುರದು ಬರೂವ ನೀರೆ ಕಣ್ಣೀರು. ಅವಕ್ಕೂ ಗಟ್ಟಿಯಾಗಬೇಕು. ಕಲ್ಲಾಗಬೇಕು. ಮನಸು ಹೂ ಕಲ್ಲಾಗಬೇಕು. ಅಂದ್ರ ಸಂತೋಷ ಆದಾಗ ಹೂವಿನ್ಹಂಗ ಅರಳೂದು. ನೋವು ಬಂದ್ರ ಕಲ್ಲಿನ್ಹಂಗ ಗಟ್ಟಿಯಾಗೂದು ಅಷ್ಟೆ. ನಾವು ಅಳೂದ್ರಿಂದ ಏನಾಗ್ತದ? ಇಷ್ಟಕ್ಕೂ ನಮ್ಮ ತ್ರಾಸೇ ದೊಡ್ದು ಅಂದ್ಕೊಂಡಾಗ ಅಳ್ತೀವಿ. ನಮಗ ಎದುರಸಾಕ ಆಗ್ದೇ ಇರೂದು ಯಾವುದೂ ನಮ್ಮ ಜೀವನದಾಗ ಘಟಿಸಾಕ ಸಾಧ್ಯನೇ ಇಲ್ಲ. ಇದು ನಮ್ಮ ಜೀವನದೊಳಗ ಆಗೇದ ಅಂದ್ರ, ಅದಕ್ಕ ನಾವು ಲಾಯಕ್ಕದೀವಿ. ಅದನ್ನು ಎದುರಿಸುವ, ನಿಭಾಯಿಸುವ ಛಾತಿ ನಮಗದ ಅಂತನೇ ಅರ್ಥ. ಹಂಗಿದ್ದಾಗ ಕಣ್ಣೀರು ಸುರಿಸಿ, ಸ್ವಮರುಕದ ಬಾವಿಯೊಳಗ ನಮ್ಮನ್ನೇ ನಾವು ದೂಡಬೇಕು ಯಾಕ?’ ಇಬ್ಬರೂ ಅಕ್ಕಾ ತಂಗೇರು ಹತ್ತು ವರ್ಷದ ನಂತರ ಮಾತಾಡಾಕ ಕುಂತಿದ್ರು. ಅಳಾಕ, ನಗಾಕ ಎರಡಕ್ಕೂ ರಾಶಿ ರಾಶಿ ಮಾತುಗಳಿದ್ವು. ಇವರ ಸಾಲಿಗೆ ದೊಡ್ಡಮ್ಮನೂ ಸೇರ್ಕೊಂಡರ ಅಲ್ಲೊಂದು ಬದುಕಿನ ಪಡಸಾಲಿನ ಬಿಚ್ಕೊಂತದ. ಅವರು ಸೀರಿ ತೊಗೊಂಡ ಲೆಕ್ಕದಿಂದ ಶುರು ಆಗುವ ಮಾತು, ದೇವರಿಗೆ ಒಂದು ಕೈ ನೋಡ್ಕೊಳ್ಳೂತನಾನೂ ಹೋಗ್ತದ.  ಅವರಿಬ್ಬರ ನಡು ನಾನು ಬಾಯಿ ಹಾಕಿದ್ದೆ. ‘ಯಾರರೆ ಅನುಮಾನಿಸ್ದಾಗ, ಅವಮಾನ ಮಾಡ್ದಾಗ, ನಿರ್ಲಕ್ಷ್ಯ ಮಾಡ್ದಾಗ, ನಮ್ಮ ಇರುವನ್ನು ಅಲ್ಲಗಳೆದಾಗ ಮಾತ್ರ ಅಳು ಉಕ್ಕಿ ಬರ್ತದ. ಅದನ್ನು ತಡ್ಯಾಕ ಆಗಾಂಗಿಲ್ಲ. ನೀನೂ ಕಾಕಾರೂ ೩೫ ವರ್ಷಾ ಸಂಸಾರ ಮಾಡೇರಿ. ಈಗ ಹಿಂಗ ಹೇಳ್ತಿ. ನೀ ಖರೆ ಹೇಳು ಮದಿವಿಯಾದ ಹೊಸತರೊಳಗ ಅತ್ತಿಲ್ಲೇನು?’ ಚಿಕ್ಕಮ್ಮ ಸುಮ್ಮನಾಗಿದ್ಲು. ಅಳು ಬರ್ತಿತ್ತೇನೋ? ಇಲ್ಲ. ಒಮ್ಮೆ ನಮ್ಮನಿ ಮಾವಿನ ಗಿಡ ದಿಟ್ಟಿಸಿ ನೋಡ್ದಕ್ಕಿನ, ‘ನೋಡಲ್ಲೆ, ಆ ದೊಡ್ಡ ಮಾವಿನ ಕಾಯಿನ ಎಲಿ ಹೆಂಗ ಮರೀ ಮಾಡ್ಯಾವು ನೋಡು… ಎಷ್ಟು ಮಂಗ್ಯಾ ಬಂದ್ರೂ ಕಂಡಿಲ್ಲದು’ ಅಂದ್ರು. ಅಂಗಳದಾಗ ನಿಂತು ಹಿಸಿಕಿ ಕೊಟ್ಟ ಹಣ್ಣು, ಕಣ್ಮುಚ್ಚಿ ಹೀರ್‌್ಕೊಂತ ನಿಂತ ನನಗ ಆ ಕಾಯಿ, ಎಲಿ, ಮಂಗ್ಯಾ ಯಾವೂ ಕಾಣವಲ್ದಾಗಿತ್ತು. ನಾನು ಚಿಕ್ಕಮ್ಮನಿಗೆ ಸವಾಲು ಹಾಕೇನಿ ಅನ್ನೂ ಮದದೊಳಗ ರಸ ಹೀರ್ತಿದ್ದೆ. ‘ಮನಸು ಹಂಗೆ. ಕೆಲವೊಮ್ಮೆ ಹುಡುಕಿ ಹೆಕ್ಕಿ, ಹಣ್ಣು ಕಿತ್ತೊಗಿಯೂ ಮಂಗ್ಯಾನ್ಹಂಗ. ಇನ್ನೂ ಕೆಲವೊಮ್ಮೆ ಯಾರ ಕಣ್ಣಿಗೂ ಕಾಣದೇ ಇರೂಹಂಗ ಬೆಚ್ಚಗೆ ಕಾಪಿಡುವ ಎಲಿ ಇದ್ಹಂಗ. ಇದು ಕಡೀಕ ಕೇಳೂದು ನಮ್ಮ ಮಾತು ಮಾತ್ರ. ಎಲ್ಲಿ ಮಂಗ್ಯಾ ಆಗಬೇಕು? ಎಲ್ಲಿ ಮನಶಾ ಆಗಬೇಕು ಅನ್ನೂ ನಿರ್ಧಾರ ನಮ್ಮದೇ ಆಗಿರ್ಬೇಕು. ಅಳ್ತಿದ್ದೆ. ನಮ್ಮತ್ತಿ ಎಲ್ಲಾ ಹೆಣ್ಣ ಹಡದಿಯಲ್ಲಬೇ ಅಂತ ಹಂಗಿಸಿದಾಗೆಲ್ಲ ಅಳ್ತಿದ್ದೆ. ಹಿಂಗೆ ಒಮ್ಮೆ ಅತ್ತು ಅತ್ತು ಹೈರಾಣಾದಾಗ ಅನಿಸಿದ್ದು ಅತ್ರೇನು ಮಕ್ಕಳು ಗಂಡಾಗ್ತಾವ? ಇಲ್ಲ. ಅತ್ತೇನು ಪ್ರಯೋಜನ? ದೇವರು ಹೆಣ್ಣು ಕೊಟ್ಟಾನ. ನಮಗೂ ಅಂಥಾ ಹೆಣ್ಣು ಕೊಡಲಿಲ್ಲ ಅಲ್ಲ ಅಂತ ಮಂದಿ ಕರಬೂಹಂಗ ಮಕ್ಕಳನ್ನ ಬೆಳಸ್ತೀನಿ ಅಂತ ನಿರ್ಧಾರ ಮಾಡ್ದೆ. ಯಾವ ಕಾರಣಕ್ಕೂ ಅಳೂದಿಲ್ಲ. ದೇವರು ನಾ ಅತ್ತೂ ಕರದು ಮಾಡ್ಲಿ ಅನ್ನೂವಂಥ ಸಂದರ್ಭ ತಂದಾಗೂ ಕಲ್ಲಾಗಿದ್ದೆ. ಇದು ಜಿದ್ದು. ದೇವರ ಮ್ಯಾಲಿನ ಜಿದ್ದು. ಈ ಜಿದ್ದಿನಿಂದ ಇನ್ನೊಬ್ಬರಿಗೆ ತ್ರಾಸಂತೂ ಇಲ್ಲಲ್ಲ.  ಆಮೇಲೆ ನಿಮ್ಮಣ್ಣ ಹುಟ್ದಾ. ಆ ಮಾತು ಬ್ಯಾರೆ. ಆದ್ರ ಇವೊತ್ತಿಗೂ ಅಳಬಾರದು ಅನ್ನೂ ನಿರ್ಧಾರ ಗಟ್ಟಿಯಾಗಿಯೇ ಉಳದದ. ಇದು ನಮ್ಮೊಳಗಿನ ಬೆಳಕು. ಅದು ನಮಗೇ ಕಾಣಬೇಕು. ನಮ್ಮ ಜೀವನಾನ ತೋರಬೇಕು. ಮುಂದ ಅಳಬೇಕು ಅನ್ನಸ್ದಾಗಲೆಲ್ಲ ಬೇಂದ್ರೆ ಅಜ್ಜನ ಪದಗಳು ನನಗ ಗಟ್ಟಿಯಾದ್ವು. ರೊಟ್ಟಿ ಬಡ್ಕೊಂತ ‘ನನ್ನ ಕೈ ಹಿಡಿದಾಕೆ ಅಳುನುಂಗಿ ನಗು ಒಮ್ಮೆ, ನಾನೂನು ನಕ್ಕೇನ’ ಹಾಡು ಹಾಡ್ತಿದ್ರ ರೊಟ್ಟಿ ತೆಳು ಆಗ್ತಿದ್ವು. ಮನಸೂ ತಿಳಿ ಆಗ್ತಿತ್ತು. ತೀರ ಅಂಥ ಸಂದರ್ಭ ಬಂದ್ರ, ನೀನು ಇದನ್ನ ಮನನ ಮಾಡ್ಕೊ. ‘ಹುಸಿ ನಗುತ ಬಂದೇವ, ನಸುನಗುತ ಬಾಳೋಣ, ತುಸು ನಗುತ ತೆರಳೋಣ’ ‘ಬಡತನ ಗಿಡತನ ಕಡೆತನಕುಳಿದಾವೇನ, ಎದೆಹಿಗ್ಗು ಕಡೆ ಮಟ್ಟ, ಬಾಳಿನ ಕಡಲಾಗ ಅದನ ಮುಳುಗಿಸಬ್ಯಾಡ, ಕಡೆಗೋಲು ಹಿಡಿ ಹುಟ್ಟ’ ಅಂತ ಹಾಡಾಕ ಸುರು ಮಾಡಿದ್ರು. ಮೊದಲಾದ್ರ ಇವರ ಚಿತ್ರಹಾರ್ ಮುಗಿಯೂದಿಲ್ಲ ಅಂತ ಮೂಗುಮುರಿಯೂ ಮಕ್ಕಳು ಅವೊತ್ತು ಸುಮ್ನ ಕೇಳಿರಲಿಲ್ಲ. ಕೇಳಿ ಸುಮ್ನ ಆಗಲೂ ಇಲ್ಲ. ‘ಗಂಡ ಅಂತಾನಂತ ಅತ್ಗೊಂತ ಕುಂತ್ರ, ಸಿಟ್ಟಿಗೆದ್ರ ಬದುಕು ಮೂರಾಬಟ್ಟಿ ಆಗ್ತದ. ಕಟ್ಗೊಂಡ ಗಂಡ ಪೂರ್ವಜನ್ಮದ ಮಗಾ ಅಂತ ತಿಳ್ಕೊಂಡು ಕ್ಷಮಿಸ್ಕೊಂತ ಹೋಗಬೇಕು. ಅವರೂ ಅಷ್ಟೆ. ಕಟ್ಗೊಂಡು ಹೆಂಡ್ತಿ, ಮಗಳಿದ್ಹಂಗ ಅನ್ನೂ ಮಮಕಾರ ಬೆಳಸ್ಕೊಂಡ್ರ ಜಗಳ ಕಡಿಮಿ ಆಗ್ತಾವ. ಎದಿಹಿಗ್ಗು ಉಳದೇ ಉಳೀತದ… ಇವೆಲ್ಲ ಕಾಲ ಮಾಗಿದ್ಹಂಗ, ಪ್ರೀತಿ ಗಟ್ಟಿ ಆದ್ಹಂಗ ಬರ್ತದ. ಈಗೀಗ ನೀವು ಪ್ರೀತಿ ಬಲಿಯಾಕೆ ಬಿಡೂದಿಲ್ಲ. ಪ್ರೇಮದ ಕಾವು ಇಳಿಯೂ ಮುನ್ನ, ಪ್ರೇಮದ ಪೂರ ಕಡಿಮಿ ಆಗಿ, ನದಿ ಹೊಳಿ ಹರಿಯೂ ಮೊದಲೇ ದಾರಿ ಬ್ಯಾರೆ ಅನ್ನೂಹಂಗ ಜಗಳಾಡ್ತೀರಿ. ಕಾದು ನೋಡ್ರಿ. ‘ಜಗಳ ಕಾಯ್ದು’ ಅಲ್ಲ‘ ಅಂತಹೇಳಿ ಸುಮ್ನಾಗಿದ್ರು. ಈ ‘ಎದಿಹಿಗ್ಗು ಕಡೆತನಕ’ ಅನ್ನೂ ಪದ, ಹಸಿ ಗೋಡಿಯೊಳಗ ಹಳ್ಳ ನೆಟ್ಟಂಗ ಗುರಿ ಮುಟ್ಟಿತ್ತು. ಅನ್ನೋರು ಅಂತಾರ. ಆಡ್ಕೊಳ್ಳೋರು ಆಡ್ಕೊಂತಾರ. ನಮ್ಮ ಎದಿ ಹಿಗ್ಗು ನಮಗಿದ್ರ ಯಾವ ನೋವು ಎಷ್ಟು ಹೊತ್ತಿನ ಅತಿಥಿ? ಸದಾ ಕಣ್ಣೀರೊಳಗ ತೇಲೂ ನನಗ ಇದು ಪಾಠ ಆಗಿತ್ತು. ಆದ್ರ ಗಟ್ಟಿಯಾಗೂದು, ಗಟ್ಟಿ ಮಾಡೂದು ಅವರಿವರ ಮಾತಲ್ಲ. ನಮ್ಮ ಬದುಕು. ****************************************

ಎದಿಹಿಗ್ಗು ಕಡೆತನಕ. Read Post »

You cannot copy content of this page

Scroll to Top