ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ವಾರ್ಷಿಕ ವಿಶೇಷ

ವಾರ್ಷಿಕೋತ್ಸವದ ವಿಶೇಷ ಲೇಖನವಾರ್ಷಿಕೋತ್ಸವದ ವಿಶೇಷ ಲೇಖನ ಅನುವಾದಕರ ಮುಂದಿರುವ ಸವಾಲುಗಳು ಪಾರ್ವತಿ ಜಿ.ಐತಾಳ್ ಅನುವಾದ ಅಥವಾ ಭಾಷಾಂತರವೆಂದರೆ ಭಾಷೆಯನ್ನು ಬದಲಾಯಿಸುವ ಕ್ರಿಯೆ ಎಂಬುದು ಸಾಮಾನ್ಯರ ಅಭಿಪ್ರಾಯ. ಇದು ಎರಡು ಭಾಷೆಗಳ ನಡುವೆ ಅನುವಾದಕ/ಕಿಯ ಮೂಲಕ ನಡೆಯುವ ಸಂವಹನ. ಇದಕ್ಕೆ ಮುಖ್ಯವಾಗಿ ಬೇಕಾದುದು ಎರಡು ಭಾಷೆಗಳ ಜ್ಞಾನ. ಯಾವ ಭಾಷೆಯಿಂದ ನಾವು ಅನುವಾದ ಮಾಡುತ್ತಿದ್ದೇವೋ ಅದನ್ನು ಮೂಲ ಭಾಷೆಯೆಂದೂ ಯಾವ ಭಾಷೆಗೆ ಮಾಡುತ್ತಿದ್ದೇವೋ ಅದನ್ನು ಉದ್ದಿಷ್ಟ ಭಾಷೆಯೆಂದೂ ಕರೆಯುತ್ತೇವೆ. ಅನುವಾದಕನಿ/ಕಿಗೆ ತನ್ನ ಮಾತೃಭಾಷೆ ಅಥವಾ ಶಿಕ್ಷಣ ಮಾಧ್ಯಮದ ಭಾಷೆ ಚೆನ್ನಾಗಿ ತಿಳಿದಿರುತ್ತದೆ. ನಂತರ ಕಲಿತ ಭಾಷೆಯ ಮೇಲೆ ಅಷ್ಟು ಒಳ್ಳೆಯ ಹಿಡಿತವಿರುವುದಿಲ್ಲ. ಆದ್ದರಿಂದ ಹೆಚ್ಚು ಹಿಡಿತವಿರುವ ಭಾಷೆಯನ್ನು ಉದ್ದಿಷ್ಟ ಭಾಷೆಯಾಗಿ ಆತ ತೆಗೆದುಕೊಳ್ಳುತ್ತಾನೆ. ಅದು ಸೂಕ್ತ ಕೂಡಾ. ಅನುವಾದಕನಿಗೆ ಭಾಷೆ ಮಾತ್ರ ತಿಳಿದಿದ್ದರೆ ಸಾಲದು.ಪ್ರತಿಯೊಂದು ಭಾಷೆಯೊಳಗೆ ಹಾಸು ಹೊಕ್ಕಾಗಿರುವ ಸಂಸ್ಕೃತಿ ಮತ್ತು ಜೀವನಕ್ರಮಗಳ ಬಗ್ಗೆ ಕೂಡಾ ಅರಿವಿರಬೇಕು. ಅದಕ್ಕಾಗಿ ಆ ಭಾಷೆಯನ್ನಾಡುವ ಜನರೊಂದಿಗೆ ಬೆರೆತ ಅನುಭವವೂ ಇರಬೇಕು. ಇವು ಅನುವಾದಕನ ಪ್ರಾಥಮಿಕ ಅಗತ್ಯಗಳು.        ಈ ಪ್ರಾಥಮಿಕ ಅರ್ಹತೆಗಳಿರು ಓರ್ವ ಅನುವಾದಕ/ಕಿ ಕೂಡಾ ಅನುವಾದ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾನೆ/ಳೆ. ಇವುಗಳನ್ನು ಬಾಹ್ಯ ಸಮಸ್ಯೆಗಳು ಮತ್ತು ಆಂತರಿಕ ಸಮಸ್ಯೆಗಳು ಎಂದು ವಿಂಗಡಿಸ ಬಹುದು. ಭಾಷೆಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಾಹ್ಯ ಸಮಸ್ಯೆಗಳೆಂದೂ ಅನುವಾದಕ/ಕಿ ಮತ್ತು ಮೂಲ ಲೇಖಕ/ಕಿಯರ ವ್ಯಕ್ತಿತ್ವ ಗಳಿಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ಆಂತರಿಕ ಸಮಸ್ಯೆಗಳೆಂದೂ ಹೇಳಬಹುದು.     ಭಾಷೆ ಮತ್ತು ಸಂಸ್ಕ್ರತಿಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ಸತತ ಅಧ್ಯಯನ-ಅವಲೊಕನ-ಚಿಂತನಗಳ ಮೂಲಕ ನಿವಾರಿಸಿಕೊಳ್ಳ ಬಹುದು. ನಾವು ಒಂದು ಕೃತಿಯನ್ನು   ಅನುವಾದಕ್ಕೆ  ಎತ್ತಿಕೊಂಡಾಗ ಮೂಲಭಾಷೆ ತಿಳಿದಿದ್ದರೂ ಕೆಲವು ಕ್ಲಿಷ್ಟ ಪದಗಳು ಅರ್ಥವಾಗದಿದ್ದಾಗ ಶಬ್ದಕೋಶವನ್ನು ತೆರೆದು ನೋಡುತ್ತೇವೆ. ಆದರೆ ಶಬ್ದ ಕೋಶವು ನಮಗೆ ಅಗತ್ಯವಿರುವ ಎಲ್ಲಾ ಶಬ್ದಗಳ ಅರ್ಥ ಕೊಡುವುದಿಲ್ಲ. ಅಲ್ಲದೆ ಕೆಲವೊಮ್ಮೆ ಅಲ್ಲಿ ಒಂದು ಶಬ್ದಕ್ಕೆ ಎರಡು ಮೂರು ಅಥವಾ ಹೆಚ್ಚು ಅರ್ಥಗಳಿರುತ್ತವೆ. ಆಗ ನಾವು ಮೂಲ ಶಬ್ದಕ್ಕೆ ಸಮನಾಗಿ ನಿಲ್ಲ ಬಲ್ಲ ಪರ್ಯಾಯ ಪದವನ್ನು ಆಯ್ದುಕೊಳ್ಳುವುದು ಹೇಗೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಆಗ ನಾವು ಮೂಲವಾಕ್ಯದ ಸಂದರ್ಭದ ಕುರಿತು   ಚೆನ್ನಾಗಿ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇದು ಸಾಧ್ಯವಾಗುವುದು ಅನುವಾದಕನ ವಿಶೇಷವಾದ ಗ್ರಹಣ ಸಾಮರ್ಥ್ಯದ ಮೂಲಕ ಮಾತ್ರ. ಅದನ್ನು ರೂಢಿಸಿಕೊಳ್ಳದೆ ಇದ್ದರೆ ಅನುವಾದಕ ತನ್ನ ಕೆಲಸದಲ್ಲಿ ವೀಫಲನಾಗುತ್ತಾನೆ.ಉದಾಹರಣೆಗೆ   ಇಂಗ್ಲಿಷ್ ನ ಒಂದು ವಾಕ್ಯ ಹೀಗಿರುತ್ತದೆ ಅಂತಿಟ್ಟುಕೊಳ್ಳಿ :  The novel experience of watching Shakespeare’s play was highly thrilling.. ಇಲ್ಲಿ novel ಅನ್ನುವುದಕ್ಕೆ ಎರಡು ಅರ್ಥಗಳಿವೆ. ಒಂದು ಹೊಸತು ಇನ್ನೊಂದು ಕಾದಂಬರಿ. ಇಲ್ಲಿ ಅರ್ಥದ ಬಗ್ಗೆ ಅನುವಾದಕ ಹೆಚ್ಚು ತಲೆಕೆಡಿಸಿಕೊಳ್ಳದೆ ಕಾದಂಬರಿಯ ಅನುಭವ ಎಂದು ಹೇಳಿದರೆ ಅನರ್ಥವಾಗುತ್ತದೆ. ಅನೇಕ ಅನುವಾದಕ ಇಂಥ ಗೊಂದಲಗಳನ್ನುಂಟು ಮಾಡುವುದಿದೆ. ಇಂಥ ಸಾವಿರಾರು ಉದಾಹರಣೆಗಳನ್ನು ಕೊಡಬಹುದು. ಅದೇ ರೀತಿ ಮೂಲಭಾಷೆಯಲ್ಲಿರುವ ಪದಪುಂಜ ಅಥವಾ phrase ಗಳ ಅರ್ಥ ಕೂಡಾ ಆ ಸಂದರ್ಭದಲ್ಲಿ ಯಾವುದು ಸೂಕ್ತ ಅನ್ನುವುದನ್ನು ಆಲೋಚಿಸುವ ಹೊಣೆ ಅನುವಾದಕ/ಕಿಯದ್ದು. ಕನ್ನಡದಲ್ಲೇ ನೋಡಿ.ಕೈ ಅನ್ನುವ ಶಬ್ದ ಇನ್ನೊಂದು ಶಬ್ದದೊಂದಿಗೆ ಸೇರಿ phrase ಆಗಿ ಯಾವ ರೀತಿ ಅರ್ಥ ಬದಲಾಗುತ್ತ ಹೋಗುತ್ತದೆ ನೋಡಿ. ಕೈಕೊಡು, ಕೈ ಮಾಡು, ,ಕೈಯೆತ್ತು, ಕೈನೀಡು, ಕೈಬಿಡು ಕೈಹಚ್ಚು ಇತ್ಯಾದಿ. ಇನ್ನೊಂದು ಭಾಷೆಯಲ್ಲಿ ಈ ರೀತಿಯ phrase ಗಳು ಇಲ್ಲದಿರಲೂ ಬಹುದು. ಅದು ಅಲ್ಲಿನ ಭಾಷಾ ಬಳಕೆಯ ರೀತಿಯನ್ನು ಅವಲಂಬಿಸಿರುತ್ತದೆ. ಅದೇ ರೀತಿ ಗಾದೆ ಮಾತುಗಳು. ಭಿನ್ನ ಸಂಸ್ಕೃತಿಗಳಲ್ಲಿ ಗಾದೆ ಮಾತುಗಳು ಭಿನ್ನವಾಗಿರುತ್ತವೆ. ಅದು ಅನುವಾದಕನಿ/ಕಿಗೆ ಮೊದಲೇ ತಿಳಿದಿರಬೇಕು.  ಉದ್ದಿಷ್ಟ ಭಾಷೆಯಲ್ಲಿ ಅದೇ ಸಂದರ್ಭದಲ್ಲಿ ಯಾವ ಗಾದೆಮಾತನ್ನು ಬಳಸಬಹುದು, ಯಾವದು ಹೆಚ್ಚು ಸಹಜ ಮತ್ತು ಸೂಕ್ತ ಅನ್ನುವುದರ ಬಗ್ಗೆ ಅನುವಾದಕ/ಕಿ  ಗ್ರಹಿಸುವ ಸಾಮರ್ಥ್ಯವನ್ನು ರೂಪಿಸಿಕೊಳ್ಳಬೇಕು. ಉದಾಹರಣೆಗೆ ಇಂಗ್ಲಿಷ್ ನಲ್ಲಿರುವ ಒಂದು ಗಾದೆ ಮಾತು Make hay while the sun shines ಅಂತ. ಅಂದರೆ ಸೂರ್ಯನ ಬಿಸಿಲು ಇದ್ದಾಗಲೇ ಹುಲ್ಲು ಒಣಗಿಸಿಕೋ ಅಥವಾ ಸರಿಯಾದ ಅವಕಾಶ ಮುಂದೆ ಇದ್ದಾಗ ಅದನ್ನು ಸರಿಯಾಗಿ ಬಳಸಿಕೋ ಎಂದರ್ಥ. ಇದಕ್ಕೆ ಪರ್ಯಾಯವಾಗಿ ‘ಬೆಂಕಿ ಇದ್ದಾಗ ಚಳಿ ಕಾಯಿಸಿಕೋ’ ಎಂದು ಹೇಳಬಹುದು. ಇಂಥ ಸಂದರ್ಭಗಳಲ್ಲೆಲ್ಲ ಅನುವಾದಕ/ಕಿ ಅತ್ಯಂತ ಸೃಜನಶೀಲನಾ/ಳಾಗಿರಬೇಕಾಗುತ್ತದೆ.  ಇನ್ನು ಒಂದೇ ಮೂಲದ ಭಾಷೆಯಿಂದ ಹುಟ್ಟಿಕೊಂಡ ಹಲವು ಭಾಷೆಗಳು ನಮ್ಮ ಭಾರತದಂಥ ಬಹುಭಾಷಾ ದೇಶದಲ್ಲಿ ಬೇಕಾದಷ್ಟು ಇವೆ. ಇಂದು ಚಾಲ್ತಿಯಲ್ಲಿರುವ ಅನೇಕ ಬಾಷೆಗಳು ಸಂಸ್ಕೃತ ಜನ್ಯ ಅನ್ನುತ್ತೇವೆ. ಈ ವಿಚಾರದಲ್ಲಿ ಅನುವಾದದ ಒಂದು ಸಮಸ್ಯೆಯೆಂದರೆ ಬೇರೆ ಬೇರೆ ಭಾಷೆಗಳಲ್ಲಿ ಒಂದೇ ಶಬ್ದವನ್ನು ಬೇರೆ ಬೇರೆ ಸಂದರ್ಭಗಳಲ್ಲಿ ಬೇರೆ ಬೇರೆ ಅರ್ಥದಲ್ಲಿ ಬಳಸಲಾಗುತ್ತದೆ ಅನ್ನುವುದು. ಉದಾಹರಣೆಗೆ ಹಿಂದಿಯಲ್ಲಿ ಉಪನ್ಯಾಸ ಅಂದರೆ ಕಾದಂಬರಿ. ಕನ್ನಡದಲ್ಲಿ ಅದೇ ಶಬ್ದದ ಅರ್ಥ ಬೇರೆ. ಮಲೆಯಾಳದಲ್ಲಿ ಅವಕಾಶಂ ಅಂದರೆ ಹಕ್ಕು.ಕನ್ನಡದ ಅರ್ಥ ಬೇರೆ.  ಹಿಂದಿಯಲ್ಲಿ ಸಂಸಾರ್ ಅಂದರೆ ಜಗತ್ತು.ಮಲೆಯಾಳದಲ್ಲಿ ಸಂಸಾರಂ ಅಂದರೆ ಮಾತು. ಇಂಥ ಶಬ್ದಗಳಿಗೆ ಸಾವಿರಾರು ಉದಾಹರಣೆಗಳನ್ನು ಕೊಡುತ್ತ ಹೋಗಬಹುದು.  ಇಂಥ ಸಂದರ್ಭಗಳಲ್ಲಿ ಅನುವಾದಕ/ಕಿ ಎಚ್ಚರಿಕೆಯಿಂದಿಲ್ಲದಿದ್ದರೆ ಅನುವಾದವು ಗೊಂದಲದ ಗೂಡಾಗಬಹುದು.    ವ್ಯಕ್ತಿತ್ವದ ಸಮಸ್ಯೆಗಳು ಅಂತ ಹೇಳಿದೆ. ಒಬ್ಬ ಸೃಜನಶೀಲ ಅನುವಾದಕ/ಕಿಗೆ ಉಂಟಾಗುವ ಸಮಸ್ಯೆ ಇದು.ಒಂದು ಕೃತಿಯನ್ನು ಅನುವಾದಕ್ಕೆ ಎತ್ತಿಕೊಂಡಕೂಡಲೇ ಮೂಲಕೃತಿಯಲ್ಲಿ ಹೇಳಿದ ಕೆಲವು ವಿಚಾರಗಳ ಬಗ್ಗೆ ತನ್ನ ಅಭಿಪ್ರಾಯ/ಅನ್ನಿಸಿಕೆಗಳು ಭಿನ್ನವಾಗಿವೆಯೆಂದು ಅನ್ನಿಸಬಹುದು. ಒಬ್ಬ ಆದರ್ಶ ಅನುವಾದಕ/ಕಿ ಅನುವಾದಕ್ಕೆ ಕೈಹಚ್ಚಿದ ಕೂಡಲೇ ತನ್ನ ಚಿಂತನೆಗಳನ್ನು ಸ್ಥಗಿತಗೊಳಿಸಿ ಮೂಲ ಲೇಖಕನ ಸ್ಥಾನದಲ್ಲಿ ನಿಂತು ಆಲೋಚಿಸಲು ಕಲಿಯಬೇಕು. ಮುಲಲೇಖಕ ಯಾವ ಸಂದರ್ಭ ಸನ್ನಿವೇಶ ಪರಿಸರಗಳಲ್ಲಿ ಬರೆದನೋ ಅಂಥದ್ದೇ ವಾತಾವರಣವನ್ನು ತನ್ನ ಮನಸ್ಸಿನೊಳಗೆ ಸೃಷ್ಟಿಸಿ ಕೊಳ್ಳಬೇಕು. ಅನುವಾದವೆನ್ನುವುದು ಒಂದು ರೀತಿಯಲ್ಲಿ ಪರಕಾಯ ಪ್ರವೇಶವಿದ್ದಂತೆ.ಅನುವಾದಕನ ವ್ಯಕ್ತಿತ್ವವು ಮೂಲ ಲೇಖಕನ ವ್ಯಕ್ತಿತ್ವದೊಳಗೆ ಮಿಳಿತಗೊಳ್ಳಬೇಕು. ಹಾಗೆ ಆದಾಗಲಷ್ಟೇ ಮೂಲಕೃತಿಯ ಸತ್ವವು ಅನುವಾದದಲ್ಲಿ ಮರುಸೃಷ್ಟಿಯಾಗುತ್ತದೆ.  ಅನುವಾದಕನು ಅನುವಾದದಲ್ಲಿ ಮೂಲಲೇಖಕನ ಮಟ್ಟಕ್ಕೆ ಏರಲು ಸಾಧ್ಯವಾಗದೇ ಹೋದರೆ ಅದನ್ನು ಅಧೋನುವಾದ(under translation) ಅನ್ನುತ್ತಾರೆ. ಇದಕ್ಕೆ ಇವತ್ತು ಅನುವಾದಗೊಳ್ಳುತ್ತಿರುವ ಅನೇಕ ಅನುವಾದಿತ ಕೃತಿಗಳನ್ನು ಉದಾಹರಣೆಯಾಗಿ ಕೊಡಬಹುದು. ಹಾಗೆಯೇ ಕೆಲವೊಮ್ಮೆ ಅನುವಾದಕನ ಸೃಜನ ಸಾಮರ್ಥ್ಯ ಮತ್ತು ವಿದ್ವತ್ತುಗಳು ಮೂಲ ಲೇಖಕನನ್ನು ಮೀರಿಸುವಂತಿದ್ದರೆ ಕೆಲವೊಮ್ಮೆ ಅನುವಾದವು ಮೂಲಕೃತಿಯ ಉದಾತ್ತತೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬಹುದು. ಇದನ್ನು ಊರ್ಧ್ವಾನುವಾದ(over translation) ಅನ್ನುತ್ತಾರೆ.ಇದಕ್ಕೆ ಸೃಜನಶೀಲ ಲೇಖಕರಾಗಿ ಯಶಸ್ವಿಗಳಾದವರು ಮಾಡಿದ ಅನುವಾದಿತ ಕೃತಿಗಳನ್ನು ಉದಾಹರಣೆಯಾಗಿ ಕೊಡಬಹುದು. ಆದರೆ ಇವು ಎರಡೂ ಅತಿಗಳೇ.  ಆದ್ದರಿಂದ   ಸಮರ್ಥ ಅನುವಾದಕ ಈ ಅತಿಗಳನ್ನು ಮೀರಿ ಮೂಲ ಕೃತಿಯ ಯಥಾವತ್ತಾದ  ಪ್ರತಿಕೃತಿಯನ್ನು ಕೊಡುವ ಜವಾಬ್ದಾರಿ ತನ್ನದು ಎಂಬುದನ್ನು ಅರಿತಿರಬೇಕು.        ಇವೆಲ್ಲವೂ ಅನುವಾದಕ/ಕಿಯ ಮುಂದಿರುವ ಸಮಸ್ಯೆಗಳು ಮತ್ತು ಸವಾಲುಗಳು ಎನ್ನಬಹುದಾದರೂ ಇವು ಯಾವುವೂ ಅಪರಿಹಾರ್ಯವಾದವುಗಳಲ್ಲ. ತಾನು ಮಾಡುವ ಕೆಲಸದಲ್ಲಿ ಶ್ರದ್ಧೆ, ನಿಷ್ಠೆ,   ಶಿಸ್ತು, ಸತತ ಅಧ್ಯಯನ, ಚಿಂತನ,  ಪರಿಶ್ರಮ ಪಡುವ ಬುದ್ದಿ, ಸಮಯಪ್ರಜ್ಞೆ ಮೊದಲಾವುಗಳನ್ನು ತನ್ನಲ್ಲಿ ಬೆಳೆಸಿಕೊಳ್ಳುವುದರ ಮೂಲಕ ಒಳ್ಳೆಯ ಅನುವಾದಕನಾಗಿ/ಅನುವಾದಕಿಯಾಗಿ ಯಶಸ್ಸು ಪಡೆಯಲು ಸಾಧ್ಯ. *****************************

Read Post »

ಇತರೆ, ವಾರ್ಷಿಕ ವಿಶೇಷ

ದೀಪ್ತಿ ಭದ್ರಾವತಿ ಕವಿತೆಗಳು ಲೂಟಿಯಾದವರು ಅಗೋ ಸಿಕ್ಕಿಯೇಬಿಟ್ಟ ನಿನ್ನೆಯಷ್ಟೇ ಎಷ್ಟೆಲ್ಲ ಜನರ ಉಸಿರು ಕದ್ದು ನಡೆದವ ಇಂದಿಲ್ಲಿ ಆಸ್ಪತ್ರೆಯ ಕಲ್ಲು ಬೆಂಚಿನ ಮೇಲೆ ಸದ್ದಿಲ್ಲದೆ ಮಲಗಿದ್ದಾನೆ ಸೂರೆ ಹೋದವರು ಸೂರು ಹಾರುವಂತೆ ಕಿರುಚುತ್ತಿದ್ದರೂ ಗಮನಿಸದೆ ತನ್ನದೇ ಕನಸಲೋಕದಲ್ಲಿ ಹಾಯಾಗಿ ಕನಸುಕಾಣುತ್ತಿದ್ದಾನೆ ಲೂಟಿಯಾದವರು ಇದೀಗ ಇಲ್ಲಿ ಒಳಗಡೆಗೆ ನುಗ್ಗಲಿದ್ದಾರೆ ಎಬ್ಬಿಸಿ ಇವನನ್ನು ಬೀದಿಗೆಳೆದು ತಂದು ಆರೋಪಪಟ್ಟಿಯ ಸಿದ್ದವಾಗಿಸಿ ಕಂಬಕ್ಕೆ ಕಟ್ಟಿ ಥಳಿಸಲಿದ್ದಾರೆ “ಆಳಿಗೊಂದು ಕಲ್ಲು, ತಲೆಗೊಂದು ಮಾತು” ಕನ್ನ ಹಾಕುವುದೆ ಕಾಯಕ ಎಂದುಕೊಂಡವನಿಗೆ ಯಾವುದೂ ಹೊಸತಲ್ಲ ಪ್ರತಿ ಬಾರಿ ಆತ ಮಿಡಿತ ಹೊತ್ತು ನಡೆದಾಗಲೂ ಗಲಾಟೆ ಭುಗಿಲೇಳುತ್ತದೆ ಛಾವಣಿಗಳು ಬೊಬ್ಬೆ ಹಾಕುತ್ತವೆ ಪಂಚಾಯ್ತುದಾರರು ಊರ ಒಳಗಿನ ಮೂಲೆ ಮೂಲೆಯನು ಅವನಿಗಾಗಿ ತಡಕಿಸುತ್ತಾರೆ ಅವನು ಕಣ್ಣು ತಪ್ಪಿಸಿ ಮತ್ತೆಲ್ಲಿಯೋ ದೋಚುತ್ತಾನೆ ಹುಡುಕಿ ದಣಿದವರೆಲ್ಲ “ಇನ್ನು ಬಿಡುವ ಪ್ರಶ್ನೆಯೇ ಇಲ್ಲ” ಎನ್ನುತ್ತ ಹಾಕಿದ ಬಾಗಿಲು ಮುರಿಯುತ್ತಾರೆ ಬಡಿವ ಸದ್ದಿಗೆ ಎಚ್ಚೆತ್ತ ಅವನೂ “ಕಸುಬು ಬಿಡುವುದಿಲ್ಲ” ಕಿಚಾಯಿಸುತ್ತ ನುಗ್ಗುತ್ತಾನೆ ಹೆರಿಗೆ ವಾರ್ಡಿನ ಕಿಟಕಿಯೊಳಗೆ ರೇವೆ ಇಲ್ಲಿ ಹೀಗೆ ನಾನು ಒಂಟಿ ಕೂತಿರುವಾಗಲೇನೆನಪಿನ ಹಕ್ಕಿಯೊಂದುಕಿಟಕಿಯಲಿ ಸರಳಿನಾಚೆಯಲಿನಿಂತು ಕೂಗುತ್ತದೆ. ನಕ್ಷತ್ರದ ನಡುವಿನಲ್ಲಿ ನೆರಳುಗಳನೋಡುತ್ತೇನೆ ತೇವಗೊಂಡ ಆಗಸದ ಮುಗುಳೊಂದುಒದ್ದೆ ಕಣ್ಣಿನ ಅಂಚಿನಲ್ಲಿ ನಿಂತುಗೋಲಿಯಾಡುತ್ತದೆ… ಬರಲೋ ಬೇಡವೋಗೊತ್ತಾಗದೆ ಮತ್ತದೇ ಬಿಡುಗಣ್ಣಿನಲಿಆಗಸ ನೋಡುತ್ತೇನೆ. ಅಸ್ಥಿರಗೊಂಡ ಎದೆಯ ಕವಾಟದ ಚೂರೊಂದುಮುಗ್ಗಲು ಗೋದಾಮಿನಲಿ ಸೇರಿ ನರಳುತ್ತದೆ.ಇಲ್ಲ ಬಿಡು ಭೇಟಿಯಿನ್ನು ಸಾಧ್ಯವಿಲ್ಲಹರಕು ಕನಸೊಂದು ಯಾವುದೋವಿಳಾಸ ಹುಡುಕಿ ತಿರುಗುತ್ತದೆ.. ಇನ್ನು ಆ ನೆರಳು, ನೆನಪು, ಮುಗಿದ ರೇವೆಎಲ್ಲವೂ ನನ್ನ ಕಾಲುಂಗರದ ನಡುವಿನಲಿಎದ್ದ ಕುರುಗಳಲ್ಲಿಯಾವುದೋ ಸನ್ನೆಗಾಗಿ ಕಾಯತೊಡಗುತ್ತವೆ.. ಗೋದಾಮು ಅಸಲಿಗೆ ಹೇಳುವುದು ಎನೂ ಇರಲಿಲ್ಲನಡು ಮಧ್ಯಾಹ್ನವೊಂದು ತೆವಳು ಗಾಳಿಯಲಿತೇಲುತ್ತ ಫೌಂಡೇಶಿನ ಕ್ರೀಮುಗಳಲಿಸುಕ್ಕು ಮರೆಸುವಾಗಉಗುರು ಕಚ್ಚುವುದಲ್ಲದೆಮತ್ತೇನಿರುತ್ತದೆ ಹೇಳು ತೀಡುವ ಬೆಳ್ಳಿಚಾಮರಕ್ಕೆ ಇರುಳ ಲೇಪಿಸುವಾಗಬಣ್ಣ ಹೀರಿದ ಬ್ರಶ್ಶಿನಂತೆತಿರು ತಿರುಗಿ ಮತ್ತದೇ ಕನಸುಗಳ ಒಪ್ಪ ಮಾಡುವಾಗಹಳೆಯ ಗೋದಾನಿನ ಮುಗ್ಗುಗಟ್ಟಿದಜೋಳ ಸುಮ್ಮನೆ ನಗುವಾಗಏನೆಲ್ಲ ಹೇಳುವಶಕುನದವನ ಹಾಗೇಕೆ ನಿಂತೆ ಹೇಳು ಒಣ ತುಟಿಗಳಲ್ಲಿ ಮಾತುಗಳ ಹೆಕ್ಕುವೆನೆಂಬನಿನ್ನ ಹುಂಬತನಕ್ಕೆನನ್ನ ಲಿಪ್ ಸ್ಟಿಕ್ಕಿನ ತೇರು ಹೊಳೆದದ್ದುಸುಳ್ಳಲ್ಲಸುಡುವ ಕೆಂಡ ಹಾಯ್ದ ಮಿಡತೆ ಒಳಗೊಳಗೆಕಣ್ಣಿನಲಿಕನಸು ನಕ್ಕಿದ್ದು ಖರೆಕುತ್ತಿಗೆಯಲ್ಲೊಂದು ಕರಿ ಇರುವೆಗಳಸಾಲು ಕಾಲುಗಟ್ಟಿದಗೂಟದ ಬೇಲಿಮತ್ತೆ ಮತ್ತೆ ತಡೆ ಹಿಡಿಯುತ್ತಉಗ್ಗುಗಳ ಲೋಕದಲ್ಲಿ ನನ್ನ ಉಗುಳು ನುಂಗಿಸುವಾಗ ಎಲ್ಲ ಬಲ್ಲವನಂತೆ ನಿಂತದ್ದು ನಿನ್ನದೇತಪ್ಪು ಇದೀಗ ಮಾತಾಡಬೇಡೆಂದುನಾನು ಹೇಳುವ ಸ್ಥಿತಿಯಲ್ಲಿ ಇಲ್ಲಆದರೆ ನೀನು.. ************************************

Read Post »

ಇತರೆ, ವಾರ್ಷಿಕ ವಿಶೇಷ

ಚರ್ಚೆ- ಮುದ್ರಣ ಮಾಧ್ಯಮ ಮತ್ತು ಸಾಹಿತ್ಯೋಪಾಸನೆ

ಚರ್ಚೆ- ಮುದ್ರಣ ಮಾಧ್ಯಮ ಮತ್ತು ಸಾಹಿತ್ಯೋಪಾಸನೆ ಡಿ.ಎಸ್.ರಾಮಸ್ವಾಮಿ ಸಾಹಿತ್ಯವನ್ನು ಮುದ್ರಣ ಮಾಧ್ಯಮ ನಿರ್ಲಕ್ಷಿಸುತ್ತಿದೆ ಎಂದು ಸಂಗಾತಿಯ ಸಂಪಾದಕರು ಅಲವತ್ತುಕೊಂಡಿದ್ದಾರೆ. ಪ್ರತಿ ಭಾನುವಾರ ಎಲ್ಲ ಪತ್ರಿಕೆಗಳ ಪುರವಣಿಗಳನ್ನು ಹರಡಿಕೊಂಡು ಓದುತ್ತಿದ್ದ ಅನುಭೂತಿ ಈ ಕೋವಿಡ್ ನೆವದಿಂದಾಗಿ ಇಲ್ಲವಾದದ್ದು ನೆನಪಾಗಿ ಸಂಗಾತಿಯ ಸಂಪಾದಕರ ಆರೋಪ ಸರಿ ಅನ್ನಿಸಿತು ಕೂಡ. ಆದರೆ ಸ್ವಲ್ಪ ಕಾಲ ಯೋಚಿಸಿದ ಮೇಲೆ ಆ ಅಭಿಪ್ರಾಯ ತಾತ್ಕಾಲಿಕ ಅನ್ನಿಸುತ್ತಿದೆ. ಓದುಗರೇ ಇಲ್ಲದೆ ಪ್ರಸರಣವೇ ಇಲ್ಲದೆ ಪತ್ರಿಕೆಗಳೇ ಮುಚ್ಚುತ್ತಿರುವ ಕಾಲದಲ್ಲಿ ಸಾಹಿತ್ಯ ಸಂಸ್ಕೃತಿ ಅಂತೆಲ್ಲ ಕೇಳುವುದು ಹೊಟ್ಟೆ ಹಸಿದು ಸಾಯುತ್ತಿರುವನ ಮುಂದೆ ಸಂಗೀತ ನುಡಿಸಿದಂತೆ ಅನ್ನಿಸಿತು. ಈ ನಡುವೆ ಬಾಗಿಲು ಹಾಕಿಕೊಂಡ ಟಿವಿ ವಾಹಿನಿಗಳು, ಕೆಲಸ ಕಳೆದುಕೊಂಡ ಮುದ್ರಣ ಮಾಧ್ಯಮದ ಗೆಳೆಯರು ನೆನಪಾದರು. ಕೋವಿಡ್ ಎನ್ನುವುದೇ ಒಂದು ನೆವವಾಗಿ ಒಳಗೊಳಗೇ,  ಸಾಯುತ್ತಿದ್ದ ಎಷ್ಟೊಂದು ಆರ್ಥಿಕ ಸಂಸ್ಥೆಗಳು, ಖಾಸಗಿ ಹಣಕಾಸು ಸಂಸ್ಥೆಗಳು ಬಾಗಿಲು ಮುಚ್ಚಿದವು. ನಿವೃತ್ತಿಯ ಸೌಲಭ್ಯವನ್ನೇ ಮೊಟಕು ಮಾಡಿದ ಸಂಸ್ಥೆಗಳಂತೆಯೇ ಹೊಸ ನಿವೃತ್ತಿಯ ಯೋಜನೆ ಪ್ರಕಟಿಸಿದ ಸಂಸ್ಥೆಗಳೂ ಇವೆ. ಸದಾ ಸರ್ವದಾ ಜಾಹೀರಾತಿನ ಆದಾಯದ ಮೇಲೇ ನಿಂತಿರುವ ಪತ್ರಿಕೆಗಳಿಗೆ ಈ ಪುರವಣಿಗಳ ನಿರ್ವಹಣೆ ಯಾವತ್ತೂ ಸವಾಲಿನದೇ….ಏನೆಲ್ಲ ಮಾಡಿಯೂ ಒಂದು ಸಂಚಿಕೆ ತಂದರೆ ಅದಕ್ಕೆ ಬರುವ ಪ್ರತಿಕ್ರಿಯೆ ಪೂರಕವಾಗಿರುವುದಿರಲಿ ಆ ಸಂಚಿಕೆಯ ಹಿಂದಿನ ಉದ್ದೇಶಗಳನ್ನು ಮರೆತು ಅಲ್ಲಿ ಒಳಗೊಂಡ ಲೇಖಕರ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವವರೇ ಕಾಣುತ್ತಾರೆ. ಈ ವರ್ಷ ಕೋವಿಡ್ ದಾಳಿಯ ಪೂರ್ವದಲ್ಲಿ ಪ್ರಕಟವಾದ ಎಲ್ಲ ಪತ್ರಿಕೆಗಳ ದೀಪಾವಳಿ ಮತ್ತು ಯುಗಾದಿ ವಿಶೇಷಾಂಕಗಳನ್ನು ಹರಡಿಕೊಂಡು ಕೂತರೆ ಆ ಎಲ್ಲ ಪತ್ರಿಕೆಗಳೂ ವಿಶೇಷಾಂಕದ ಹೂರಣಕ್ಕಿಂತ ಜಾಹೀರಾತಿನ ಬಲ ಸಾಧಿಸುರುವುದೇ ಸಾಧನೆಯಾಗಿದೆ. ಸಾಹಿತ್ಯ ಮತ್ತು ಸಂಸ್ಕೃತಿ ಚಿಂತನೆಗೆ ತಕ್ಕನಾದ ಅವಕಾಶ ಬೇಕಾಗುವುದು ಬೌದ್ಧಿಕ ಹಸಿವೆಯ ನಿವಾರಣೆಗೆ. ಸದ್ಯದ ಸ್ಥಿತಿಯಲ್ಲಿ ಎಲ್ಲ ಸಮುದಾಯಗಳೂ ಆತಂಕ ಮತ್ತು ಭಯದಲ್ಲಿ ಇರುವಾಗ  ಮತ್ತು ಹೊಟ್ಟೆಯ ಹಸಿವೆಯನ್ನು ನೀಗಿಕೊಳ್ಳಲು ಯಾವುದಾದರೂ ಮಾರ್ಗ ಇದೆಯೇ ಎಂದು ಚಿಂತಿಸುತ್ತಿರುವಾಗ ಸಂಪಾದಕರ ಆಗ್ರಹಕ್ಕೆ ಅರ್ಥ ಇರುವಂತಿಲ್ಲ. ಏಕೆಂದರೆ ಸದ್ಯ ನಾವೆಲ್ಲರೂ ಎದುರಿಸುತ್ತಿರುವ ಮೂಲಭೂತ ಸಮಸ್ಯೆಯ ಮುಂದೆ ಸಾಹಿತ್ಯವೋ ಸಂಗೀತವೋ ಅಥವ ಸಂಸ್ಕೃತಿ ಚಿಂತನೆಯೋ ಅರ್ಥವಿಲ್ಲದ ಪ್ರಶ್ನೆಯಾಗಿಯೇ ಕಾಡುತ್ತಿದೆ…… ದಿನ ಕಳೆದ ಹಾಗೆ ಯಾಂತ್ರಿಕವಾಗುತ್ತಿರುವ ಬದುಕ ಪಲುಕುಗಳನ್ನು, ಆಧುನಿಕತೆಯ ಮೂಲಕ ಕಂಡುಕೊಂಡಿರುವ ಸವಲತ್ತುಗಳ ಉರುಳುಗಳನ್ನು, ರೌರವ ನರಕವನ್ನು ನಮ್ಮೊಳಗೆ ಸೃಷ್ಟಿಸಿರುವ ಒತ್ತಡಗಳನ್ನೂ ನೀಗಿಕೊಳ್ಳಲು ಲಲಿತಕಲೆಯ ಒಂದಲ್ಲ ಒಂದು ವಿಭಾಗ ನಮ್ಮ ನೆರವಿಗೆ ಬಂದೊದಗುತ್ತಲೇ ಇವೆ. ಅದು ಸಾಹಿತ್ಯ ಓದುವುದು, ಚಿತ್ರಕಲೆಯನ್ನೋ, ಶಿಲ್ಪಕಲೆಯನ್ನೋ ನೋಡುವುದು, ಸಂಗೀತವನ್ನು ಕೇಳುವುದು ಹಾಗೇ ನೋಡನೋಡುತ್ತಲೇ ಕೇಳುವುದೂ ಆಗಿರುವ ಸಿನಿಮಾ ಅಥವ ನಾಟಕ ಯಾವುದೋ ಒಂದು ಆಗಿ ನಮ್ಮ ವಿಷಾದದ ಹೊತ್ತುಗಳಲ್ಲಿ ಚೈತ್ರದ ಚಿಗುರನ್ನು ಪಲ್ಲವಿಸಿವೆ, ಸಂತಸದ ಸಮಯವನ್ನು ದುಪ್ಪಟ್ಟುಗೊಳಿಸಿವೆ. ಲಲಿತ ಕಲೆ ಮನುಷ್ಯನಿಗೆ ಬೇಕೇ ಬೇಕು ಅಂತ ವಾದಿಸುವವರ ಸಮಸಮವಾಗಿ ಅದೆಲ್ಲವನ್ನೂ ನಿರಾಕರಿಸಿ ಕಲೆಯ ಗೊಡವೆಗೆ ಕೈಹಾಕದೆಯೇ ಭವ್ಯವಾಗಿ ಬದುಕು ನಡೆಸಿದವರ, ನಡೆಸುತ್ತಿರುವವರ ದೊಡ್ದ ಪಟ್ಟಿಯೇ ನಮ್ಮೆದುರು ತೆರೆದುಕೊಳ್ಳುತ್ತದೆ. ಆದರೂ ಕಲೆ ಮನುಷ್ಯನಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವವನ್ನು ಪೂರೈಸಿಕೊಳ್ಳಲಾದರೂ ಬೇಕೇ ಬೇಕು. ಏಕೆಂದರೆ ಲಲಿತಕಲೆಯ ವಿವಿಧ ವಿಭಾಗಗಳಲ್ಲೂ ಒಂದು ಸಾಮಾನ್ಯವಾದ ಧರ್ಮವಿದೆ. ಅದೆಂದರೆ ಬದುಕನ್ನು ಪ್ರೀತಿಸುವಂತೆ ಉದ್ದೀಪಿಸಿ ಅದರ ಅರ್ಥವನ್ನು ಹಿಗ್ಗಲಿಸಿ ಸಾರ್ಥಕಪಡಿಸುವುದು. ಪ್ಲೇಟೋ ತನ್ನ ಆದರ್ಶ ರಾಜ್ಯದಲ್ಲಿ ಕವಿಗಳಿಗೆ ಜಾಗವಿರುವುದಿಲ್ಲ ಅಂತ ಹೇಳಿದ್ದು ನೆನಪಿರುವ ಹಾಗೇ ಕಾಳಿದಾಸನಿಲ್ಲದ ಭೋಜರಾಜನನ್ನು, ಪಂಪನಿಲ್ಲದ ಅರಿಕೇಸರಿಯನ್ನೂ ಊಹಿಸಿಕೊಳ್ಳುವುದು ಅಸಾಧ್ಯ. ವ್ಯಾಂಗೋ ಗೆರೆಗಳಿಗೆ ಜೀವ ಬರಿಸಿದ್ದನ್ನು, ತನ್ನ ಗಾಯನದಿಂದಲೇ ದೀಪ ಬೆಳಗಿಸಿದ ಸಂಗೀತಗಾರನ ಕತೆಯಂಥ ಹಲವು ಕಥಾನಕಗಳನ್ನು, ಚಾಪ್ಲಿನ್‌ನಿಂದ ಹಿಡಿದು ನಿನ್ನೆ ಮೊನ್ನೆ ಸಿನಿಮಾದ ವ್ಯಾಕರಣ ಕಲಿತು ಅದ್ಭುತ ಚಿತ್ರಗಳನ್ನು ಮಾಡುತ್ತಲೇ ಇರುವ ಅಸಂಖ್ಯರನ್ನು, ನೀನಾಸಂ, ರಂಗಾಯಣ, ಎನೆಸ್ಡಿ ಮುಂತಾದ ಸಂಸ್ಥೆಗಳ ಮೂಲಕ ತಯಾರಾಗಿ ಈಗ ಸದ್ಯದ ಸಿನಿಮಾ, ರಂಗಭೂಮಿ, ದೂರದರ್ಶನಗಳಲ್ಲಿ ಹೊಸತನವನ್ನು ತಂದು ತಂದು ಪೇರಿಸುತ್ತಿರುವ ಪ್ರತಿಭೆಗಳನ್ನೂ ಹಾಗೆಲ್ಲ ನೇಪಥ್ಯಕ್ಕೆ ಸರಿಸುವ ಹಾಗಿಲ್ಲ. ಆದರೂ ಒಟ್ಟೂ ಪ್ರಜಾ ಸಂಖ್ಯೆಗೆ ಲಲಿತಕಲೆಗಳ ಮೋಡಿಗೆ ಸಿಲುಕಿದವರ ಸಂಖ್ಯೆಯನ್ನು ಹೋಲಿಸಿದರೆ ಅದು ಕಡಿಮೆಯೆಂದೇ ನಮಗೆಲ್ಲರಿಗೂ ಗೊತ್ತು. ಹಾಗಿದ್ದೂ ಸಾಹಿತಿಗಳ ನಡುವೆ, ಸಿನಿಮಾ ಮಾಡುವವರ ನಡುವೆ, ಸಂಗೀತಗಾರರ ನಡುವೆ, ಕಲಾವಿದರ ನಡುವೆ ಒಂದು ಅಘೋಷಿತ ಯುದ್ಧ ನಡೆಯುತ್ತಲೇ ಇರುತ್ತದೆ. ತಾನು ನಂಬಿದ್ದು, ಸೃಷ್ಟಿಸಿದ್ದೇ ಮಹತ್ವದ್ದು ಅನ್ನುವ ಇರಾದೆಯೇ ಇದಕ್ಕೆಲ್ಲ ಮೂಲ. “ಏಕಂ ಸತ್ ವಿಪ್ರಾ ಬಹುದಾ ವದಂತಿ” ಅನ್ನುವುದು ಗೊತ್ತಿದ್ದೂ ಇರುವ ಒಂದೇ ಸತ್ಯವನ್ನು ಸಾಹಿತಿಗಳೂ ಕಲಾವಿದರೂ ಅವರವರಿಗೆ ತಿಳಿದ ಮಟ್ಟದಲ್ಲಿ ವ್ಯಾಖ್ಯಾನಿಸುತ್ತಿರುವುದೂ ಇದಕ್ಕೆ ಪ್ರಮುಖ ಕಾರಣ. ಲಲಿತ ಕಲೆಗಳ ಒಂದೊಂದು ವಿಭಾಗಕ್ಕೂ ಒಂದೊಂದು ವಿಶೇಷ ಲಕ್ಷಣಗಳಿವೆ. ಪ್ರತಿ ಕಲೆಗೂ ಸಾಧನಗಳು ಬೇರೆ,ಬೇರೆ. ಸಾಹಿತಿ ತಾನು ತನ್ನ ಕಾಲದಲ್ಲಿ ನೋಡಿದ್ದನ್ನು ಅನುಭವಿಸಿದ್ದನ್ನು ಆಗಿನ ಭಾಷೆ, ಶೈಲಿ, ಸಂಪ್ರದಾಯ, ಕಟ್ಟಳೆಗಳನ್ನು ಅನುಸರಿಸಿ ದಾಖಲು ಮಾಡುತ್ತಾನೆ. ತನ್ನ ಪ್ರತಿಭೆಗೆ ತಕ್ಕ ಶಬ್ದಾರ್ಥ,ಧ್ವನಿಗಳ ಮೂಲಕ ಆ ಸಮಯದಲ್ಲಿ ಹೊಳೆದ ಸೌಂದರ್ಯವನ್ನು ಬುದ್ಧಿಯಿಂದ ಸೆರೆಹಿಡಿದು, ಧಾರಣೆಯಿಂದ ನಿಲ್ಲಿಸಿ ತನ್ನ ಕೃತಿಯಲ್ಲೊಂದು ಜಾಗವನ್ನು ಕೊಟ್ಟು ಸಲಹಿರುತ್ತಾನೆ. ಸಾಹಿತ್ಯವೆಂಬುದು ಎಲ್ಲ ಕಾಲಕ್ಕೂ ಸಹಜವಾದ, ಮಾನವ ಪ್ರಪಂಚಕ್ಕೆಲ್ಲ ಸಾಮಾನ್ಯವಾಗಿ ಹೊಂದುವ, ರಸಸೃಷ್ಟಿಯಾಗಿರುವುದರಿಂದ ಸಾಹಿತಿಯೊಬ್ಬನ ಕೃತಿ ಮುಂದೆ ಎಲ್ಲ ಕಾಲದಲ್ಲೂ ಅದನ್ನು ಸವಿಯುವವರಿಗೆ ಅಕ್ಷಯಪಾತ್ರೆಯಾಗಿ ಒದಗುತ್ತಲೇ ಇರುತ್ತದೆ, ಅದಕ್ಕೆ ಅಂಥ ತಾಕತ್ತು ಇದ್ದರೆ. ಹಾಗೇ ದೂಷಿಸುವವರಿಗೂ ಅದು ಅಕ್ಷಯಪಾತ್ರೆಯೇ ಸರಿ! ಇನ್ನು ಚಿತ್ರಕಾರ-ಚಿತ್ರಕ್ಕೆ ಬೇಕಾಗುವ ಬಣ್ಣ, ರೂಪರೇಖೆ, ಕುಂಚ, ಹಲಗೆ, ಕಾಗದ,ಬಟ್ಟೆ ಇತ್ಯಾದಿ ಇತ್ಯಾದಿಗಳನ್ನು ಅನುಕೂಲಕ್ಕೆ ತಕ್ಕಂತೆ ಯೋಚಿಸಿ ಯೋಜಿಸುತ್ತಾನೆ. ಸಂಗೀತವಂತೂ ನಾದ, ಶಾರೀರ, ಪಕ್ಕ ವಾದ್ಯ, ಸಾಧನೆ ಇತ್ಯಾದಿಗಳಿಂದ ಹುಲುಸುಗೊಂಡರೆ, ಶಿಲ್ಪಿ ತನ್ನ ವ್ಯವಸಾಯಕ್ಕೆ ಮಣ್ಣು, ಕಲ್ಲು, ಗಾರೆ, ಮರ, ಲೋಹ, ಬಟ್ಟೆ, ಬೆಂಡು. ಉಳಿ, ಸುತ್ತಿಗೆ, ಚಾಣ ಇತ್ಯಾದಿಗಳನ್ನು ಬಳಸಿ ತನ್ನಿಷ್ಟದ ಕೃತಿಯನ್ನು ರಚಿಸುತ್ತಾನೆ. ರಸಾಸ್ವಾದನೆ ಅದನ್ನು ಸವಿಯುವವರ ಮಟ್ಟಕ್ಕೆ ತಕ್ಕ ಆಳ ಅಗಲಗಳ ವ್ಯಾಖ್ಯೆಯನ್ನು ತುಂಬಿಕೊಡುತ್ತದೆ. ‍ಬದುಕಿನ ಅರ್ಥವನ್ನು ಬಗೆಬಗೆಯಾಗಿ ಬಗೆಯುತ್ತಲೇ ಇರುವ ಸಾಹಿತಿ-ಕಲಾವಿದರನ್ನು ಅನುಮಾನಿಸುವುದು, ಸನ್ಮಾನಿಸುವುದು, ಸಾಮಾಜಿಕ ಸಾಂಸ್ಕೃತಿಕ ಕಾರಣಗಳಿಂದ ಅವನನ್ನು ಎತ್ತಿ ಮೆರಸುವುದು ಹಾಗೇ ಎತ್ತಿ ಎಸೆಯುವುದನ್ನೂ ಲೌಕಿಕ ಮಾಡುತ್ತಲೇ ಬಂದಿದೆ. ಟಿ.ಆರ್.ಪಿಗಳ ಕಾಲದಲ್ಲಿ ಇದು ಸಹಜವೂ, ನ್ಯಾಯವೂ ಆದುದೇ ಆಗಿದೆ! ಸಮಾಜದ ಆಶಯಕ್ಕೆ ಅಂದರೆ ಪ್ರಭುತ್ವಕ್ಕೆ ಪೂರಕವಾಗಿ ಕೃತಿ ರಚಿಸುವವನಿಗೆ ಇರುವ ಮಾನ ಮರ್ಯಾದೆಗಳು ಅದಕ್ಕೆ ವಿರೋಧಿಯಾಗಿರುವವನಿಗೆ ಸಲ್ಲುವುದು ಯಾವತ್ತೂ ವಿಳಂಬವೇ. ಏಕೆಂದರೆ ಸತ್ಯದ ಹುಡುಕುವಿಕೆಯಲ್ಲಿ ಯಾವತ್ತೂ ಪರಿಣಾಮಗಳು ತಟ್ಟಂತ ಸಿಕ್ಕ ಉದಾಹರಣೆಗಳು ಇಲ್ಲವೇ ಇಲ್ಲ. ಸತ್ಯ ಎನ್ನುವುದು ಸಿಗುತ್ತದೋ ಇಲ್ಲವೋ ಅಂಥದೊಂದು ಸತ್ಯವನ್ನು ಬೆನ್ನು ಹಿಡಿದು ಹೊರಡುವುದೇ ನಿಜಕ್ಕೂ ಅಗ್ನಿದಿವ್ಯದ ಅಸಲಿಯತ್ತು. ಉಪನಿಷತ್ತಿನಿಂದ ಓಷೋವರೆಗೂ ಈ ಇದೇ ಸತ್ಯದ ಹುಡುಕುವಿಕೆಯೇ ನಮ್ಮೆಲ್ಲ ಸಾಹಿತಿ-ಕಲಾವಿದರನ್ನೂ ಪೋಷಿಸಿದೆ, ತನ್ನ ಉದರದಲ್ಲಿಟ್ಟುಕೊಂಡು ಕಾಪಾಡಿದೆ. ತಾನು ಬದುಕಿದ್ದ ಕಾಲದಲ್ಲಿ ಅಜ್ಞಾತನಾಗಿದ್ದ ಬೋದಿಲೇರ್, ಸತ್ತ ನಂತರವೇ ತೀವ್ರ ತರದ ಚರ್ಚೆಗಳನ್ನು ಹುಟ್ಟುಹಾಕಿದ ಬ್ರೆಕ್ಟ್, ಎಂಟುನೂರು ವರ್ಷಗಳ ಹಿಂದೆ ರಚಿತವಾದರೂ ಇವತ್ತಿಗೂ ಹೊಸ ಹೊಸ ಜಿಜ್ಞಾಸೆಗಳಿಗೆ ಒಡ್ಡುವ ವಚನಗಳು, ಲಿಯಾನಾರ್ಡೊ ಡಾವಿಂಚಿಯ ಚಿತ್ರಗಳು, ಯಾವುದೋ ಉತ್ಖನನದಲ್ಲಿ ಸಿಕ್ಕುವ ಪುರಾತನರ ಜೀವನಶೈಲಿಯ ಪುರಾವೆಗಳು ಯಾವತ್ತೂ ವರ್ತಮಾನದ ಜನಜೀವನ ಆಧುನಿಕತೆಯ ಬಾಗಿಲಿನಲ್ಲಿದ್ದೂ ಹೇಗೆ ಇನ್ನೂ ತನ್ನ ಹಳೆಯ ಹೊಸಿಲಲ್ಲೇ ಏದುಸಿರು ಬಿಡುತ್ತಿದೆ ಅಂತ ಪ್ರಮಾಣೀಕರಿಸುತ್ತಲೇ ಬಂದಿವೆ. ವರ್ತಮಾನದ ಸಾಹಿತ್ಯ ನಿರ್ಮಾಪಕರನ್ನು, ಅದರಲ್ಲೂ ಪರಂಪರೆಯ ಹಂಗಿಲ್ಲದೇ ತಾನು ತಿಳಿದ ಸಂಗತಿಯೇ ದೊಡ್ಡದೆಂದು ವಾದಕ್ಕೆ ನಿಲ್ಲುವವರನ್ನು ಪರಂಪರೆಯೆಂಬ- ಬಳಸದೇ ಅಂದಗೆಟ್ಟ ಸರೋವರಕ್ಕೆ ಒಮ್ಮೆ ಕರೆದೊಯ್ದು-ಈಗಿನ ಬಹುತೇಕರು ಹೇಳುವ ಹಾಗೇ ಆ ಸರೋವರದ ನೀರು ಬಳಸುವವರಿಲ್ಲದೇ ಕೊಳಚೆಯಾಗಿ ಕೆಸರು ತುಂಬಿದೆ. ಹಸಿರು ಪಾಚಿಗಟ್ಟಿ ಹೂಳು ತುಂಬಿಕೊಂಡಿದೆ-ಅದರ ಹೂಳನ್ನೆತ್ತಿ ತೆಗೆದು ಎಸೆದು, ಸ್ವಲ್ಪ ಆಳಕ್ಕೆ ಅದನ್ನು ತೋಡಿ ವಿಸ್ತರಿಸಿ, ಎಲ್ಲೋ ಮುಚ್ಚಿ ಹೋಗಿರುವ ಜಲದ ಕಣ್ಣುಗಳನ್ನು ತೆರೆದು ಹೆಚ್ಚು ನೀರು ಬಂದು ಸೇರುವಂತೆ ಮಾಡಿದರೆ ಜೊತೆಗೇ ಕುಸಿದಿರುವ ಸೋಪಾನದ ಪಾವಟಿಗೆಗಳನ್ನು ದುರಸ್ತಿ ಮಾಡಿಸಿದರೆ ಆ ಕೊಳದ ನೀರನ್ನೇ ಆಶ್ರಯಿಸಿ ಉದ್ಯಾನವನ್ನೇ ಬೆಳಸಬಹುದು. ಉದ್ಯಾನ ನಿರ್ಮಾಣವಾದರೆ ಅಳುವ ಮಕ್ಕಳು ಆಟವಾಡಲು ಬಂದಾವು. ಹಕ್ಕಿ ಪಕ್ಷಿಗಳ ಜೊತೆಜೊತೆಗೇ ದಣಿವಾರಿಸಿಕೊಳ್ಳಲು ನಮಗೂ ಒಂದಿಷ್ಟು ತಾವು ಸಿಕ್ಕುತ್ತದೆ. ಆಗ ಆರಾಮವಾಗಿ ಕೂತು ಮುರಿದು ಕಟ್ಟಿದ ಸರೋವರದ ದಡದಲ್ಲಿ ಭಾಷೆಯ ಸಂಗತಿಗಳನ್ನು ಅರ್ಥಮಾಡಿಕೊಳ್ಳಬಹುದು. ಅದು ಬಿಟ್ಟು ಯಾವ ಮೂಲದಿಂದ ಮನೆಯ ನಲ್ಲಿಯಲ್ಲಿ ನೀರು ಬರುತ್ತದೋ ಎಂಬ ಅರಿವಿಲ್ಲದೇ ಬರಿದೇ ತೋಡಿ ತೋಡಿ ಬಳಸಿದರೆ ನೀರಿನ ಮಹತ್ವ ಅರಿಯುವುದಾದರೂ ಹೇಗೆ? ಭಾಷೆಯ ಸಂಗತಿ ಸಿದ್ಧಿಸುವುದಾದರೂ ಹೇಗೆ? ಸದ್ಯದ ವರ್ತಮಾನದಲ್ಲಿ ಸಾಹಿತ್ಯ ಸಂಸ್ಕೃತಿ ಭಾಷೆಗಿಂತಲೂ ಅತ್ಯಗತ್ಯವಾಗಿ ಆರ್ಥಿಕ ಚೇತರಿಕೆಗೆ ಸಹಾಯವಾಗುವ ಯೋಜನೆಗಳು ತುರ್ತಾಗಿ ಬೇಕಿವೆ. ಹೊಟ್ಟೆ ತುಂಬಿದ ನಂತರ ಉಳಿದೆಲ್ಲವನ್ನೂ ನಿಭಾಯಿಸಬಹುದು. ಆದರೆ ಬದುಕಿಗೆ ಆಸರೆಯಾಗಿ ಇಷ್ಟೂ ದಿನ ಇದ್ದ ಪರಿಕರಗಳು ಇದ್ದೂ ಇಲ್ಲದ ಹಾಗೆ ಆಗಿರುವ ಹೊತ್ತಲ್ಲಿ ಮುದ್ರಣ ಮಾಧ್ಯಮವೇನು ಬೇರೆ ಯಾರಿಗೂ ಸಾಹಿತ್ಯದ ಉಪಾಸನೆಗೆ ಸಮಯವಾಗಲೀ ವ್ಯವಧಾನವಾಗಲೀ ಇರಬೇಕೆನ್ನುವುದೇ ಅನುಚಿತ ಸಲಹೆ ಅನ್ನಿಸುತ್ತಿದೆ. *************************************

ಚರ್ಚೆ- ಮುದ್ರಣ ಮಾಧ್ಯಮ ಮತ್ತು ಸಾಹಿತ್ಯೋಪಾಸನೆ Read Post »

ಇತರೆ, ವಾರ್ಷಿಕ ವಿಶೇಷ

ಅವಳೇ ಕಾರಣ…

ಲಹರಿ ಅವಳೇ ಕಾರಣ… ಸ್ಮಿತಾ ಭಟ್ ಏನೇ ಹೇಳಿ ಮಕ್ಕಳನ್ನು ಸಂಭಾಳಿಸುವ ವಿಷಯದಲ್ಲಿ ತಾಯಿಗೇ ಹೆಚ್ಚಿನ ಪ್ರಶಸ್ತಿಗಳು ಸಲ್ಲಬೇಕು.ಎಲ್ಲದಕ್ಕೂ ಅಮ್ಮಾ ಎಂದೇ ಕೂಗುವ ಕಂದಮ್ಮಗಳನ್ನು ತೃಪ್ತಿ ಪಡಿಸುವುದು ಸುಲಭದ ವಿಷಯವಂತೂ ಅಲ್ಲ. ಏಕ ಕಾಲದಲ್ಲಿ ನೂರು ಮಕ್ಕಳನ್ನು ಗಾಂಧಾರಿ ಹೇಗೆ ಸಂಭಾಳಿಸಿದಳೋ ಎಂದು, ಒಂದೇ ಮಗುವಿನ ತಾಯಿಯಾದ ನನಗೆ ಸದಾ ಕಾಡುವ ಸಂಗತಿ. “ಅಯ್ಯೋ ನಮ್ಮ ಕಾಲದಲ್ಲಿ ಹೀಗಿರಲಿಲ್ಲಪ್ಪ” ಈಗಿನ ಕಾಲದ ಮಕ್ಳೇ ಹಾಗೋ, ಪಾಲಕರೇ ಹಾಗೋ ಅನ್ನುವ, ಅವಕಾಶ ವಂಚಿತರಾಗದಂತೆ ಹಿರಿಯರಾಡುವ ಮಾತುಗಳು ನೇರ ತಾಕುವುದು ತಾಯಿಯನ್ನೇ. “ತಾಯಿಯಂತೆ ಕರು ನೂಲಿನಂತೆ ಸೀರೆ”ಎಂದು ಗುಣಗಾನದಲ್ಲೋ,ಅವಹೇಳನದಲ್ಲೋ , ಅನಾವರಣ ವಾಗುವುದು ಒನ್ಸ್ ಅಗೇನ್ ತಾಯಿ. ಗಂಡನ ಮನೆಯಲ್ಲಿ ಕೆಲಸ ಕಾರ್ಯ, ಅಡುಗೆ, ಸೇವೆ,ಸಹಕಾರ, ಯಾವುದರಲ್ಲಿ ವ್ಯತ್ಯಾಸ ವಾದರೂ ಅಪ್ಪನ ಮನೇಲಿ ತಾಯಿ ಏನೂ ಕಲಿಸಿಲ್ವೆನೋ ಅಂತಲೇ ರಾಗ ತೆಗೆಯುವುದು. ಒಟ್ಟಿನಲ್ಲಿ ಕೆಟ್ಟದಕ್ಕೆಲ್ಲ ಶನೀಶ್ವರನೇ ಕಾರಣ ಎನ್ನುವಂತೆ ತಾಯಿ ಎನ್ನುವವಳು, ಮಕ್ಕಳ ವಿಷಯದಲ್ಲಿ ಚೌತಿ ಚಂದ್ರನ ನೋಡಿದವಳಂತೆ ಬದುಕುತ್ತಿರುತ್ತಾಳೆ. ಈ ಕರೋನಾ ಕಾಲದ ಕಾರಣದಿಂದ ನಿರಂತರವಾಗಿ ಮಕ್ಕಳು ಮನೆಯಲ್ಲೇ ಕಳೆಯುವುದರಿಂದ  ಸಂಭಾಳಿಸಿವುದಂತೂ ಅತೀವ  ಕಷ್ಟದ ಕೆಲಸ. ಮತ್ತದು ತಾಯಂದಿರ ಹೆಗಲಮೇಲೆ ಸದಾ ಹೊರುವ ಹೊರೆಯಾಗಿದೆ. ಚಿಕ್ಕ ಮಕ್ಕಳಿಗೆ ಗದರಿಯಾದರೂ ಮಾತು ಕೇಳಿಸಬಹುದು. ಆದರೆ ದೊಡ್ಡ ಮಕ್ಕಳು ಹಾಗಲ್ಲ, ಅವರು ನಿರಂತರವಾಗಿ ಮನೆಯೊಳಗೇ ಇರುವದರಿಂದ ಡಿಪ್ರೆಶನ್ ಗೂ ಕೂಡಾ ಒಳಗಾಗುತ್ತಾರೆ.ಪ್ರಪಂಚಕ್ಕೆ ತರೆದು ಕೊಳ್ಳುವ ವಯಸ್ಸಾದ್ದರಿಂದ ಯಾವ ಸಮಯವನ್ನೂ ಅವರು ನಾಲ್ಕು ಗೋಡೆಯ ಮಧ್ಯೆ ಕಳೆಯಲು ಬಯಸುವುದಿಲ್ಲ.ಶಾಲೆ ಸ್ನೇಹಿತರು.ಆಟ ಓಟ ಪಾಠ ಎನ್ನುತ್ತ ಸ್ವಚ್ಛಂದವಾಗಿ ಬೆಳಯಲು ಬಯಸುತ್ತಾರೆ. ಅದು ಸರಿ ಕೂಡಾ. ಆದರೆ ಈಗ ಅನಿವಾರ್ಯವಾಗಿ ಮನೆಯಲ್ಲೇ ನಿರಂತರವಾಗಿ ಕಾಲಕಳೆಯುಬೇಕಾಗಿದೆ ಆದ್ದರಿಂದ ಹಿರಿಯರ  “ಬೇಡ””ಬೇಡ”, ಗಳೇ ಹೆಚ್ಚು ಕಿವಿಗೆ ತಾಕಿ ಎಲ್ಲದಕ್ಕೂ  ತನ್ನ ಕಟ್ಟು ಪಾಡುಗಳಿಗೆ ಒಳಪಡಿಸುತ್ತಿದ್ದಾರೆ ಅನ್ನಿಸಲು ಶುರುವಾಗುತ್ತದೆ.ಅದೆಂತಹ ಪ್ರೀತಿಯೇ ಆದರೂ ಅವಡುಗಚ್ಚಿಕೊಂಡೇ ಇದ್ದರೆ ಉಸಿರುಗಟ್ಟುವುದು ನಿಜವಾದ್ದರಿಂದ ಬಿಡುಗಡೆಯನ್ನು ಬಯಸುವ ವಯಸ್ಸೂ ಜೊತೆ ಸೇರಿ ಮುಗಿಬೀಳಲು ಶುರು ಮಾಡುತ್ತಾರೆ. ಸ್ವಲ್ಪ ತಿದ್ದು ನೋಡುವಾ ಮಕ್ಕಳನ್ನು, ಏನಿದು ಸಂಸ್ಕಾರವೇ ಇಲ್ದಾಂಗೆ ಆಡ್ತಾರೆ. ನಿನ್ನ ಅತಿಯಾದ ಮುದ್ದೇ ಕಾರಣ ಇದ್ಕೆಲ್ಲ, ಎಂದು ಹೊರನಡೆಯುವ ಅಪ್ಪಂದಿರಿಗೆ ಅಮ್ಮಂದಿರ ಕಷ್ಟ ಎಂದೂ ಅರ್ಥವಾಗುವದಿಲ್ಲ. ಅಯ್ಯೋ,, ಬಯ್ಸ್ಕೊ ಬೇಡ್ವೊ, ಅಪ್ಪನ ಹತ್ರ ಸ್ವಲ್ಪ ಹೇಳಿದ ಮಾತು ಕೇಳೋ ಎಂದು ಪಿಸು ದನಿಯಲ್ಲಿ ಅಲವತ್ತು ಕೊಳ್ಳುತ್ತಾಳೆ ಅಮ್ಮ. ನನ್ನದೇ ಮಗ ಒಂದಿನ “ಈ ಶಾಲೆ ಆದ್ರೂ ಯಾವಾಗ ಶುರುವಾಗುತ್ತೋ ಏನೋ” ನಿಮ್ಗಳ ಹತ್ರ ಬೈಸ್ಕೊಂಡು ಬೈಸ್ಕೊಂಡು ಸಾಕಾಯ್ತು ಅಂತ ಗೊಣಗುತ್ತಿದ್ದ. ಹೌದು ಹೆಚ್ಚಿನ ಮಕ್ಕಳೊಳಗೆ ಇಂತಹದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ. ಏಕತಾನತೆಯಿಂದ ಕಂಗಾಲಾಗಿದ್ದಾರೆ. ಪಾಲಕರಿಗೆ ಮಕ್ಕಳು ಇಡೀದಿನ ಮೊಬೈಲ್ ನೊಳಗೇ ಇರುತ್ತಾರೆ ಎನ್ನುವುದು ದೊಡ್ಡ ಚಿಂತೆಯಾಗಿದೆ.ಷ್ಟ್ರಿಕ್ಟ್ ಆಗಿ ಮೊಬೈಲ್ ಕೊಡದೇ ಇರೋಣ ಅಂದ್ರೆ ಓನ್ ಲೈನ್ ಕ್ಲಾಸ್ ಗಳು, ಮಕ್ಕಳು ಏನು ಮಾಡ್ತಾರೆ ಅಂತ ಕಾಯುಬೇಕಾ?! ಕೆಲಸ ಮಾಡ್ಕೋಬೇಕಾ? ಅನ್ನುವ ಸಂದಿಗ್ಧ ಅಮ್ಮನದು, ಏಕೆಂದರೆ ಏನು ಮಾಡ್ತಿದ್ದಾರೆ ಮಕ್ಕಳು ಎಂದು ನೋಡೋಕಾಗಲ್ವಾ? ಎನ್ನುವ ಸಿದ್ಧ ಪ್ರಶ್ನೆಯೊಂದು ಇರುತ್ತಾದ್ದರಿಂದ. ಹಲವು ತಾಯಂದಿರು ಅಕ್ಷರಶಃ ಕಂಗಾಲಾಗಿದ್ದಾರೆ. ತನ್ನೆಲ್ಲ ಚಟುವಟಿಕೆಗಳನ್ನು ಕಟ್ಟಿಟ್ಟು ಹತಾಶಳಾಗಿದ್ದಾಳೆ. ಮೊನ್ನೆ ಗೆಳತಿಯೊಬ್ಬಳು ಸಿಕ್ಕಿದ್ದಳು ಈ ವರ್ಷ ಏನ್ ಕಥೆನೋ ಏನೋ ಶೂನ್ಯ ಅವಧಿ ಎಂದು ಘೋಷಣೆಯನ್ನೂ ಮಾಡುತ್ತಿಲ್ಲ, ಶಾಲೆನೂ ಶುರು ಮಾಡುತ್ತಿಲ್ಲ,ಬರೀ ಅಂತೆ ಕಂತೆಗಳು. ಈ ಓನ್ ಲೈನ್ ಕ್ಲಾಸ್ ಅನ್ನೋದು ಮಕ್ಕಳಿಗೆ ಮೊಬೈಲ್ ಹಿಡ್ಕೊಂಡು ಕೂತ್ಕೋಳೊಕೆ ಒಳ್ಳೆ ಕಾರಣ ಆಗ್ಬಿಟ್ಟಿದೆ ನೋಡು. ಈ ಅತಂತ್ರ ಪರಿಸ್ಥಿತಿಯಲ್ಲಿ ನಮ್ಮ ಮನೆ ರಣರಂಗವಾಗಿದೆ ಕಣೇ. ಮಗನಿಗೆ ನನ್ನ ಕಂಡರೇ ಅಗಲ್ಲ,ಕಾರಣ ನಾನು ಮೊಬೈಲ ಕೊಡಲ್ಲ. ಎಲ್ಕದಕ್ಕೂ ಸಿರ್ ಅಂತ ಸಿಡಿದು ಬೀಳ್ತಾನೆ.ಅವರಪ್ಪ ನೀನೇ ಮೊಬೈಲ್ ಕೊಟ್ಟು ಕೊಟ್ಟು ಹಾಳ್ಮಾಡಿದ್ದೀಯಾ ಅಂತ ನನ್ನೇ ಅಂತಾರೆ. ಕೊಡದೇ ಹೋದ್ರೆ ಸೂರೇ ಕಿತ್ತು ಹೋಗುವಂತೆ ಆಡ್ತಾನೆ. ಸಲೀಸಾಗಿ ಸಿಕ್ಕೋದು ಅಮ್ಮಂದೇ ಮೊಬೈಲ್ ಅಲ್ವಾ ಮಕ್ಕಳಿಗೆ. ನಾವೇನೂ ಮೊಬೈಲ್ ಹಿಡ್ಕೊಂಡೇ ಓಡಾಡೋಕೆ ಆಗುತ್ತಾ! ಕೆಲಸದ ಗಡಿಬಿಡಿಯಲ್ಲಿ ಎಲ್ಲೋ ಒಂದ್ಕಡೆ ಇಟ್ಟು ಬಿಡ್ತೀವಿ.ಅದ್ಯಾವ್ದೋ ಗ್ಯಾಪಲಿ ಎತ್ಕೊಂಡ್ಬಿಡ್ತಾರೆ. ಬೈಸ್ಕೊಳೋದು ಮಾತ್ರ ನಾವೇ. ಏನೇನೋ ನಡಿತಿದೆ ಮಾರಾಯ್ತಿ ಮನೆಲಿ, ನಡೆದಿದ್ದೆಲ್ಲ ಹೇಳೋಕಾಗುತ್ತಾ ಹೇಳು ಎಂದು ಪಿಸುಗುಟ್ಟಿದಳು. ನೀನೇ ಸರಿಯಾಗಿ ಕಲಿಸಿಲ್ಲ ಚಿಕ್ಕಂದಿನಿಂದ. ಅದ್ಕೆ ಹೀಗಾಡ್ತಾರೆ ಮಕ್ಕಳು, ಅನ್ನುವಲ್ಲಿಗೆ ಕೊನೆಯ ಮೊಳೆಯ ಸುತ್ತಿಗೆ ಪೆಟ್ಟು ನಮಗೇ ನೋಡು, ಎನ್ನುತ್ತ ಜೊತೆಗಿದ್ದ ಬರೋಬ್ಬರಿ ಮೂರು ಘಂಟೆ ಮಕ್ಕಳನ್ನು ಸಂಭಾಳಿಸುವ ಬಗ್ಗೆಯೇ ಅಲವತ್ತು ಕೊಂಡಳೆಂದರೆ, ಅವಳು ಸಂಪೂರ್ಣ ಕಂಗಾಲಾಗಿದ್ದು ನಿಚ್ಚಳವಾಗಿ ಗೋಚರಿಸುತ್ತಿತ್ತು. ಒಂದು ಮನೆಯಲ್ಲಿ ಏನೇ ಸಂಭವಿಸಿದರೂ ಕಷ್ಟ,ಸುಖ ನೋವು ನಲಿವು. ಮಕ್ಕಳ ನಡೆ ನುಡಿ ಪ್ರತಿಯೊಂದಕ್ಕೂ ಅವಳೇ ಕಾರಣವಾಗುತ್ತಾಳೆ. ಎನ್ನುವುದು ಅಕ್ಷರಶಃ ಸತ್ಯ. ಚಿಕ್ಕವರಿದ್ದಾಗ ಹೆಣ್ಣಿಗೆ ಸ್ವಲ್ಪವೂ ಬಾದಿಸದ ವಿಷಯ ಮದುವೆಯಾಗಿ ಬಲಗಾಲಿಟ್ಟು ಹೊಸ್ತಿಲೊಳಗೆ ಹೊಕ್ಕ ದಿನದಿಂದ ಒಳಿತು, ಕೆಡುಕು,ಆಗು,ಹೋಗುಗಳೆಲ್ಲ ಅವಳ ಕಾಲ್ಗುಣದಮೇಲೆ ನಿರ್ಧಾವಾಗತೊಡಗುತ್ತವೆ. ಮಕ್ಕಳು ಹುಟ್ಟುತ್ತಿದ್ದಂತೆ ಅದು ದುಪ್ಪಟ್ಟಾಗಿ ಸಂಪೂರ್ಣ ಧರಾಶಾಹಿ ಯಾಗಿ ಬಿಡುತ್ತಾಳವಳು, ಆರೋಗ್ಯ, ಆಟ ಪಾಟ, ಗಾಯ, ಗಲಾಟೆ,ಎಲ್ಲದಕ್ಕೂ ಅವಳಲ್ಲಿ ಉಪಸ್ಥಿತಳಿರಬೇಕು.ಮತ್ತವಳೇ ಅದರ ಜವಾಬ್ದಾರಿ ಹೊರಬೇಕು,of course ಅಮ್ಮನಾದವಳು ಇದೆಲ್ಲವನ್ನೂ ನಿಭಾಯಿಸಲೇ ಬೇಕು. ಅದು ಅವಳ ಜನ್ಮ ಸಿದ್ಧ ಹಕ್ಕು ಮತ್ತು ಅವಕಾಶ. ಆದರೆ ಮಕ್ಕಳ ಹೊಟ್ಟೆನೋವಿಗೂ,ಬಿದ್ದು ತರಚಿಕೊಂಡದ್ದಕ್ಕೂ, ತಾಯಿಯನ್ನೇ ಕಾರಣವಾಗಿಸಿ ಬೈಯುವುದರ ಬಗ್ಗೆ ತಕರಾರಿದೆ. ಆದರೂ ಅವಳು “ಅತ್ತರೆ ಅಳಲವ್ವ ಈ ಕೂಸು ನನಗಿರಲಿ ಕೆಟ್ಟರೆ ಕೆಡಲಿ ಮನೆಗೆಲಸ” ಎನ್ನುವ ಜಾನಪದ ನುಡಿಗಟ್ಟಿನಂತೆ ಎದೆಗವಚಿಕೊಂಡೇ ಪೊರೆಯುತ್ತಾಳೆ. ತಾಯಿತಂತೆ ಸಲಹುವ ಅಪ್ಪಂದಿರೂ ಇದ್ದಾರೆ ಆದರೆ ತೀರಾ ವಿರಳ. ಅವರ ಕಷ್ಟಗಳೂ ತೇಟ್ ಅಮ್ಮನಂತೆ ಬಿಡಿ. ಅಮ್ಮನಿಗಾದರೆ ದೈವದತ್ತ ವರವಾದರೂ ಇರುತ್ತದೆ.ಆದರೆ ಇಲ್ಲಿ ಅಪ್ಪನಾದವನ ಪಜೀತಿ ನಿಜಕ್ಕೂ ಶೋಚನೀಯವೇ.. ಇನ್ನು ದಾರ್ಶನಿಕರು, ಮನೆ ಮನೆಯಲ್ಲ, ಗೃಹಿಣಿಯೇ ನಿಜವಾದ ಮನೆ, ‘ ನ ಗೃಹಂ ಗೃಹಮಿತ್ಯಾಹು ಗೃಹಿಣೀ ಗೃಹ ಮುಚ್ಯತೇ”ಎಂದಿದ್ದಾರೆ ಹೆಣ್ಣಿಲ್ಲದೇ ಒಂದು ಮನೆ ರೂಪಗೊಳ್ಳಲು ಸಾಧ್ಯವೇ ಇಲ್ಲ. ಹೆಣ್ಣನ್ನು ಮಹಾಲಕ್ಷ್ಮಿ ಎಂದು ಮಡಿಲು ತುಂಬಿ ಮನೆ ಮನಗಳ ಒಳಗೆ ಬರಮಾಡಿಕೊಳ್ಳುತ್ತೇವೆ.ಒಳ್ಳೆಯ ಮನಸಿನಿಂದ ಸದಾ ಅವಳ ಪೊರೆಯ ಬೇಕು ಎನ್ನುತ್ತಾರೆ. ಹೆಣ್ಣು ಪ್ರೀತಿ, ಹೆಣ್ಣು ಸಹನಾ ಧರಿತ್ರಿ, ಎಂದೆಲ್ಲ ಹೆಣ್ಣನ್ನು ಹೊಗಳುತ್ತಾರೆ ಮತ್ತೆ ಹಲವರು ಹೇಳುತ್ತಾರೆ. ಹೆಣ್ಣಿನಿಂದಲೇ ಮಹಾ ಮಹಾ ಯುದ್ಧಗಳು ನಡೆದವು. ಹೆಣ್ಣಿನಿಂದ ಮಹಾಭಾರತವೇ ನಡೆಯಿತು. ಹೆಣ್ಣಿಂದ ರಾವಣ ಸತ್ತ. ರಾಮ ಕಾಡಿಗೆ ಹೋದ. ದಶರಥ ಜೀವವನ್ನೇ ತೊರೆದ ಅವಳು ಮಾಯೆ. ಅವಳು ಮೋಹನಾಂಗಿ, ಅವಳು ಮೋಸ,ಎಂದು. ಹೀಗೇ ಹಲವಾರು ರೀತಿಯಲ್ಲಿ ಆರಂಭದಿಂದ ಅಂತ್ಯದ ವರೆಗೂ ಲೋಕಕ್ಕೇ ಕಾರಣವಾಗಿ ನಿಲ್ಲುತ್ತಾಳೆ ಅವಳು. ಎಲ್ಲದಕ್ಕೂ ಅವಳನ್ನು ಬೊಟ್ಟುಮಾಡಿ ಹಳಹಳಿಸುವವರಿಗೆ ಹೇಳಬೇಕಿದೆ. ನಾರಿ ಪರರುಪಕಾರಿ ನಾರಿ ಸ್ವರ್ಗಕ್ಕೆ ದಾರಿ| ನಾರಿ ಸಕಲರಿಗೆ ಹಿತಕಾರಿ|ಮುನಿದರೆ ನಾರಿಯೇ ಮಾರಿ ಸರ್ವಜ್ಞ|| ಎಂದು. ಮಕ್ಕಳ ಆರೈಕೆ,ಪಾಲನೆ, ಪೋಷಣೆಗಳಲ್ಲಿ ಕೇವಲ ಅವಳು ಮಾತ್ರ ಕಾರಣಳಾಗುವುದಿಲ್ಲ.ಮಕ್ಕಳನ್ನು ಸಂಭಾಳಿಸುವುದು ಅತ್ಯಂತ ಸೂಕ್ಷ್ಮ ಸಂವೇದಿ ವಿಚಾರ.ಅಲ್ಲಿ ಇಡೀ ಕುಟುಂಬ,ಕುಟುಂಬದ ವಾತಾವರಣವೇ ಮುಖ್ಯ ಕಾರಣವಾಗಿ ನಿಲ್ಲುತ್ತದೆ. ಆದರೆ ತಾಯಿಯಾದವಳು “ತಾಯಿಯಂತೆ ಮಗಳು ನೂಲಿನಂತೆ ಸೀರೆ” ಎನ್ನುವ ವಿಚಾರವನ್ನೂ ಮರೆಯಬಾರದು.

ಅವಳೇ ಕಾರಣ… Read Post »

ಇತರೆ

ಡಿ.ಎಸ್.ರಾಮಸ್ವಾಮಿ ಕವಿತೆಗಳು ಗೆ; ಕವಿತೆಯ ಮೊಳಕೆಯೊಡೆಸುತ್ತದೆನಿನ್ನದೊಂದು ನಗು, ಸಣ್ಣ ಸಂದೇಶಎಂದಂದು ನಿನ್ನನ್ನು ಮರುಳುಮಾಡುವುದಿಲ್ಲ; ಜೊತೆಗಿರದೆಯೂ ಜೊತೆಗೇ ಇರುವಾಗ.ನಟ್ಟ ನಡುವೆ ಎದ್ದು ಹೋಗುವ ಮಾತಿಗೆಖಬರಿಲ್ಲ, ಅನ್ನುವುದಕ್ಕೆ ಪುರಾವೆ ಯೊದಗಿಸಲಾರೆ, ಬದುಕ ದುರಿತದ ನಡುವೆ.ಆಡದೇ ಉಳಿದ ಮಾತುಗಳು ಎದೆ ತುಂಬಉಳಿದದ್ದಕ್ಕೆ ಸಾಕ್ಷಿ, ಕವಿತೆಯ ಸಾಲುಗಳಲ್ಲಿ ನೀನು, ಪದೇ ಪದೇ ಇಣುಕುತ್ತೀಯ, ಮುಖಾಮುಖಿ-ಯಾಗದೆಯೂ, ಒಳಗೇ ಉಳಿದ ಬೆಳಕು.ಹಂಚಿಕೊಳ್ಳುವುದಕ್ಕೇನು ಉಳಿದಿದೆ ಎನ್ನುವುದೆಲ್ಲ ಬರಿಯ ಒಣ ತರ್ಕದ ದೇಶಾವರಿ ಹೇಳಿಕೆಇಬ್ಬರಿಗಲ್ಲದೇ ಮತ್ತಾರಿಗೂ ಗೊತ್ತಾಗಬಾರದ ಸತ್ಯ.ಹೆಗಲಿಗೊರಗಿ, ಬೆರಳ ಹೆಣೆದು ಅನೂಹ್ಯ ಲೋಕಕ್ಕೆ ಜಾರಿ, ಮನಸ್ಸಲ್ಲೇ ಕೂಡಿದ್ದು, ಮಿಥುನದುದ್ರೇಕಕ್ಕಿಂತಮಿಗಿಲೆಂದು ಗೊತ್ತಾಗಿದ್ದು, ಲೌಕಿಕದ ಎಂಜಲದಾಂಪತ್ಯದ ಗೆರೆ ದಾಟದ ನೈತಿಕದ ಗೆಲುವು. ಭಾವವಿಲ್ಲದ ಕವಿತೆ ಬರಿಯ ಹೇಳಿಕೆಯಾಗುವುದುಲೋಕ ಸತ್ಯದ ಮಾತು. ನೀನು ನೆನಯುವ ಕೃಷ್ಣನನ್ನ ಕಾಡುವ ರಾಧೆ, ಬರಿಯ ಪುರಾಣವೇನಲ್ಲ ನಮ್ಮೊಳಗೇ ಉಳಿದ ಬಾಂಧವ್ಯದ ಸೂನು.ಮುಗಿಲಂಚಿಗೆ ಹೆಣೆದ ಬಣ್ಣ ಬಣ್ಣದ ಕಮಾನು!! ———– ಹೆಣ್ಣು ಮತ್ತು ಹಾಡು ನೇಗಿಲ ಚೂಪಿಗೆ ಸಿಕ್ಕಿದ್ದಕ್ಕೆ ಸೀತೆ ಎಂದವರೇಇವಳು ಜನಕನ ಮಗಳು ಜಾನಕಿ ಎಂದಿರಿ.ಇವಳದಲ್ಲದ ತಪ್ಪಿಗೆ ಬೆಂಕಿಗೆ ಹಾಯುವಾಗಲು ತಡೆಯದವನನ್ನು ಪುರುಷೋತ್ತಮನೆಂದಿರಿ.ತ್ರೇತಾ ಯುಗದ ತಪ್ಪನ್ನು ದ್ವಾಪರಕ್ಕೂ ಮುಟ್ಟಿಸಿ ಪಾಂಚಾಲದಲ್ಲಿ ಹುಟ್ಟಿದುದಕ್ಕೇ ಪಾಂಚಾಲಿದೃಪದನ ಮಗಳಿಗೆ ದ್ರೌಪದಿಯ ಠಸ್ಸೆಯೊತ್ತಿದಿರಿಯಾರ ಮೇಲೆ ಯಾರಿಗೂ ಹಕ್ಕೇ ಇಲ್ಲದಿದ್ದರೂಜೂಜು ಕಟ್ಟೆಯ ಸ್ವತ್ತಾಗಿಸಿ ಲಿಲಾವಿಗಿಟ್ಟುದ್ವಾಪರದ ತಪ್ಪನ್ನು ಕಲಿಗಾಲಕ್ಕೂ ತಂದಿರಿಸಿದಿರಿ ಸೀತೆಯನ್ನು ಗೆಲ್ಲುವ ಮೊದಲೇ ದಾಶರಥಿ ಕಲ್ಲಂತಾಗಿದ್ದ ಅಹಲ್ಯೆಯನ್ನು ಹೂವಾಗಿಸಿದ್ದನ್ನುಸ್ವತಃ ಮರೆತದ್ದಕ್ಕೇ ಇರಬೇಕು, ಕಿಡಿಗೇಡಿಯ ಸಣ್ಣ ಮಾತಿಗೇ ಮತ್ತೆ ಕಾಡಿಗಟ್ಟಿದ ಅವಿವೇಕಹಾಡಂತೆ ಹಾಡುತ್ತಲೇ ಕುಶಲವರು ಗೆದ್ದದ್ದು. ಉಟ್ಟ ಸೀರೆಗೆ ಕೈಯಿಟ್ಟವನನ್ನು ಸುಸ್ತಾಗಿಸಿದ್ದುಕಟ್ಟಿಕೊಂಡವರೇನಲ್ಲ, ಮಾತು ತಪ್ಪದ ಸಖನೇ,ಮುಡಿ ಕಟ್ಟುವುದಿಲ್ಲ ತೊಡೆಮುರಿದ ಹೊರತೂಎಂದವಳು ಅವಳೇನಲ್ಲ,ಯಾರದೋ ಶಪಥಕ್ಕೆಪಗಡೆಯ ದಾಳವಾದದ್ದೂ ಆಕಸ್ಮಿಕವೇನಲ್ಲ, ಯುಗ ಯುಗಗಳ ಆವರ್ತದಲ್ಲೂ ಮತ್ತೆ ವ್ಯಥೆನೆಲವಲ್ಲದೇ ನೇಗಿಲ ಮೊನೆ ಸೀಳೀತೆ ಕಲ್ಲನ್ನುಬಂಡೆಗೆ ತಾಗಿದರೆ ಹಲದ ಹಲ್ಲೂ ಮುರಿದೀತುಅದಕ್ಕೇ ಯಾವತ್ತೂ ಮಿಗದ ಬೇಟೆಯ ನೆವಕ್ಕೆಈ ಇವನ ಕೈಯ ಭರ್ಜಿ,ಈಟಿ, ತಲವಾರುಗಳು. ಯಾವುವೂ ರಕ್ಷಣೆಗೆ ಸ್ವತಃ ನಿಲ್ಲುವುದಿಲ್ಲರಕ್ತದ ಹನಿ ನೆಲಕ್ಕೆ ಬಿದ್ದರೆ ಮತ್ತೆ ಅಸುರ ಶಕ್ತಿಎದ್ದೀತೆಂಬ ಎಚ್ಚರಿಕೆಯಲ್ಲೇ ನಾಲಿಗೆಯ ಹಾಸಿಶಕ್ತಿ ರೂಪಿಣಿಯ ಕೈಯಲ್ಲಿ ಆಯುಧದ ಸಾಲುಬರಿಯ ತೋರಿಕೆಗಲ್ಲ, ಅತ್ಯಗತ್ಯದ ವೇಷ. ತೊಡದೇ ಇದ್ದರೆ ಗೊತ್ತೇ ಆಗುವುದಿಲ್ಲ ಈ ಅವಿವೇಕಿಗಳಿಗೆ. ಇವಳು ತಾಯಿ, ಮಗಳುಅಕ್ಕ ತಂಗಿಯರ ಸಂಬಂಧದಲ್ಲಿ ಸೂಕ್ಷವಾಗಿ. **************************************

Read Post »

ಇತರೆ

ಸಜ್ಜನರ ಸಂಗ ಲೇಸು ಕಂಡಯ್ಯಾ…!

ಲೇಖನ ಸಜ್ಜನರ ಸಂಗ ಲೇಸು ಕಂಡಯ್ಯಾ…! ಬಾಲಾಜಿ ಕುಂಬಾರ, ಹನ್ನೆರಡನೇ ಶತಮಾನದ ಬಸವಣ್ಣನವರ ಸಮಕಾಲೀನ ಪ್ರಮಥರಲ್ಲಿ ವೀರಗೊಲ್ಲಾಳ ಎನ್ನುವ ತತ್ವನಿಷ್ಠೆಯ ವಚನಕಾರ ಹಾಗೂ ಅನುಭಾವಿ ಶರಣನಾಗಿದ್ದನು. ಈತನ ಮೂಲತಃ ಇಂದಿನ ವಿಜಾಪೂರ ಜಿಲ್ಲೆಯ ಸಿಂದಗಿ ತಾಲೂಕಿನ ಗೊಲಗೇರಿ ಗ್ರಾಮ. ಈತನನ್ನು ‘ಕಾಟಕೋಟ’ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಕುರಿ ಕಾಯುವುದು ಈತನ ಕಾಯಕವಾಗಿತ್ತು.ಕುರಿಯ ಹಿಕ್ಕೆಯನ್ನೇ ಲಿಂಗವೆಂದು ಪೂಜಿಸಿ ಆತ್ಮಜ್ಞಾನ ಪಡೆದುಕೊಂಡು ಶರಣತತ್ವ ಪರಿಪಾಲಕನಾಗಿದ್ದನು.ತನ್ನ ವೃತ್ತಿ ಪರಿಭಾಷೆಯನ್ನು ಹಾಗೂ ತತ್ವಪರಿಭಾಷೆಯನ್ನು ಬಳಸಿಕೊಂಡು ರಚಿಸಿರುವ ಬಹುಚಿಂತನೆಯ 10 ವಚನಗಳು ಪ್ರಸ್ತುತವಾಗಿ ಲಭ್ಯವಾಗಿವೆ. ಅನುಭಾವಿ ವಚನಕಾರ, ವೀರಗೊಲ್ಲಾಳ ಒಬ್ಬ ಮುಗ್ಧ ಚಿಂತಕ, ಕಾಯಕ ಸಿದ್ಧಾಂತ ಮೈಗೂಡಿಸಿಕೊಂಡು ಸಾತ್ವಿಕ ಜೀವನ ಸಾಗಿಸಿದನು. “ವೀರಬೀರೇಶ್ವರ ಲಿಂಗಾ” ಎನ್ನುವ ವಚನಾಂಕಿತದಲ್ಲಿ ರಚಿಸಿದ ಈತನ ವಚನಗಳಲ್ಲಿ ‌ಲೌಕಿಕ ಬದುಕಿನ ಮೌಲ್ಯಗಳ ಅನಾವರಣಗೊಂಡಿದೆ. ಕುರಿ ಕಾಯುವ ವೃತ್ತಿ ಜೀವನದ ಅನುಭವದ ನುಡಿಗಳೇ ವಚನಗಳಾಗಿ ರೂಪಾಂತರ ಪಡೆದಿರುವುದು ಗಮನಿಸಬಹುದು. ಇದು ಕಾಯಕ ನಿಷ್ಠೆಯ ಬದ್ಧತೆಗೆ ಸಾಕ್ಷಿಯಾಗಿದೆ. ಆತ್ಮಜ್ಞಾನ ಪರಿಶುದ್ಧತೆ, ಸಾರ್ಥಕ ಬದುಕಿನ ಮೌಲ್ಯಗಳನ್ನು ಹೇಗೆ ಸಂಪಾದಿಸಿಬೇಕು ಎನ್ನುವ ‘ಜೀವನ ಸಂದೇಶ’ ವೀರಗೊಲ್ಲನು ತುಂಬಾ ಮಾರ್ಮಿಕವಾಗಿ ಪ್ರತಿಪಾದಿಸಿದ್ದಾನೆ. “ಕಂಥೆಯ ಕಟ್ಟಿ, ತಿತ್ತಿಯ ಹೊತ್ತು, ಮರಿಯ ನಡಸುತ್ತ ,ದೊಡ್ಡೆಯ ಹೊಡೆವುತ್ತ,ಅಡ್ಡಗೋಲಿನಲ್ಲಿ ಹೋಹ ಚುಕ್ಕಿ ಬೊಟ್ಟಿನವತಿಟ್ಟುತ್ತ, ಹಿಂಡನಗಲಿ ಹೋಹ ದಿಂಡೆಯಮಣೆಘಟ್ಟನ ಅಭಿಸಂದಿಯ ಕೋಲಿನಲ್ಲಿಡುತ್ತ.ಈ ಹಿಂಡಿನೊಳಗೆ ತಿರುಗಾಡುತಿದ್ದೇನೆ.ಈ ವಿಕಾರದ ಹಿಂಡ ಬಿಡಿಸಿ,ನಿಜ ನಿಳಯ ನಿಮ್ಮಂಗವ ತೋರಿ,ಸುಸಂಗದಲ್ಲಿರಿಸು, ಎನ್ನೊಡೆಯ ವೀರಬೀರೇಶ್ವರಲಿಂಗಾ.” ಸಾರ್ಥಕ ಬದುಕಿನ ಬಗ್ಗೆ ಸಲಹೆ ನೀಡುವ ಈ ಮೇಲಿನ ವಚನ ಸಾಲುಗಳು ಪ್ರಸ್ತುತ ಎನಿಸುತ್ತವೆ. ಹಾಗಾಗಿಯೇ ಇಂದಿಗೂ ಈತನು ಜನಪದರ ಹೃದಯದೊಳಗೆ ಅಚ್ಚಳಿಯದೇ ಉಳಿದುಕೊಂಡಿದ್ದಾನೆ. ವೀರಗೊಲ್ಲಾಳ ವಚನದಲ್ಲಿ ಮನುಷ್ಯನ ಅಂತರಂಗ ಮತ್ತು ಬಹಿರಂಗದ ತೊಳಲಾಟದ ಕುರಿತು ವಿಶ್ಲೇಷಿಸುತ್ತಾನೆ. ಲೋಕಿಕ ಬದುಕಿನ ಗಂಟು ಹಾಕಿ, ಚಿಂದಿಯ ಬಟ್ಟೆ ತೊಟ್ಟು, ಚರ್ಮವನ್ನು ಹೊದಿಕೆ ಮಾಡಿಕೊಂಡಿದ್ದೇನೆ, ಚರ್ಮದ ಚೀಲವನ್ನು ಹೊತ್ತು, ಕುರಿ – ಮರಿಗಳ ಹಿಂಡು ನಡೆಸುತ್ತಿದ್ದೇನೆ. ಕುರಿಯ ಹಿಂಡಿನಲ್ಲಿ ದೊಡ್ಡ ಕುರಿಗಳು ಮತ್ತು ಚಿಕ್ಕ ಕುರಿಗಳು ಇರುತ್ತವೆ, ಅವುಗಳನ್ನು ತಾಳ್ಮೆಯಿಂದ ಹೊಡೆದುಕೊಂಡು ಮುನ್ನಡೆಸುತ್ತಿದ್ದೇನೆ ಎಂದು ಹೇಳುತ್ತಾನೆ. ಇಲ್ಲಿ ‘ದೊಡ್ಡ ಕುರಿ, ಚಿಕ್ಕ ಕುರಿ’ ಎಂಬುದು ಆತನ ವೃತ್ತಿಪರಿಭಾಷೆಯ ಪದಗಳು, ಆದರೆ ಅದನ್ನು ಮಾನವನ ಬದುಕಿಗೆ ಹೋಲಿಕೆಯ ನುಡಿಗಳು ಎಂಬುದು ನಾವು ಅರಿತುಕೊಳ್ಳಬೇಕಾಗಿದೆ. ಮಾನವನ ಜೀವನದಲ್ಲಿ ಆಸೆ, ದುರಾಸೆ, ಅಪೇಕ್ಷೆ, ಆಕಾಂಕ್ಷೆ, ಕನಸುಗಳು ಇರುವುದು ಸಹಜ. ಸಣ್ಣ ಪುಟ್ಟ ತೊಂದರೆಗಳು ಎದುರಾದಾಗ ಅವೆಲ್ಲವೂ ಹಿಮ್ಮೆಟಿಸಿ ಮುನ್ನುಗ್ಗುವ ಪ್ರಯತ್ನ ಮಾಡಬೇಕು, ಬದುಕಿನ ಎಲ್ಲಾ ತೊಡಕುಗಳನ್ನು ಪ್ರೀತಿಯಿಂದ ಬಿಡಿಸಿಕೊಳ್ಳಬೇಕೆಂಬುದು ವಚನಕಾರ ವೀರಗೊಲ್ಲಾಳ ನೀಡುವ ಅನುಭವ. ದೊಡ್ಡ ಕೆಲಸಗಳು ಕೈಗೊಂಡಾಗ ದೊಡ್ಡ ಸವಾಲುಗಳು ಎದುರಾಗುವುದು ಸರ್ವೇಸಾಮಾನ್ಯ. ಅವುಗಳಿಗೆ ಹೆಚ್ಚು ಒತ್ತು ಕೊಟ್ಟು ಮುಂದಿನ ದಾರಿ ಹುಡುಕಬೇಕಾಗುತ್ತದೆ. ಹಾಗೇ ಸಣ್ಣ ಕುರಿಗಳು ಸಾಲಾಗಿ ಸರಿದಾರಿಗೆ ನಡೆದರೆ, ದೊಡ್ಡ ಕುರಿಗಳು ಅಡ್ಡದಾರಿ ಹಿಡಿಯುತ್ತವೆ. ಅವುಗಳಿಗೆ ಸರಿದಾರಿಗೆ ತರಲು ಜ್ಞಾನ ಎಂಬ ಕೋಲು ಅವಶ್ಯವಾಗಿದೆ ಎನ್ನುವ ಚಿಂತನೆ ವಚನಕಾರರು ಪ್ರತಿಪಾದಿಸುತ್ತಾರೆ. . ಸರಿದಾರಿ ಬಿಟ್ಟು ಅಡ್ಡದಾರಿ ಹಿಡಿಯುವ ಚುಕ್ಕಿ ಚುಕ್ಕಿ ಬಣ್ಣದ ಕುರಿಗಳನ್ನು ಬಯ್ಯುತ್ತೇನೆ, ಕೋಲಿನಿಂದ ಹೊಡೆದು ತಿದ್ದುತ್ತೇನೆ. ಅಂದರೆ ಸತ್ಯ, ನಿಷ್ಠೆ, ಸನ್ಮಾರ್ಗದಲ್ಲಿ ಹೋಗುವ ಮಾನವನು ಒಮ್ಮೊಮ್ಮೆ ಅಡ್ಡದಾರಿ ಹಿಡಿಯುತ್ತಾನೆ. ಅರಿವಿಲ್ಲದೆ ತಂತಾನೆ ಅಜ್ಞಾನದ ಕೂಪದಲ್ಲಿ ಮುಳುಗುತ್ತಾನೆ. ಅಂತಹ ಮಾನವರಿಗೆ ಅರಿವಿನ ಕೊರತೆ ಇರುತ್ತದೆ ಎಂದು ಹೇಳುತ್ತಾನೆ. ಕುರಿಗಳಲ್ಲಿ ಒಂದೇ ರೀತಿಯ ಕುರಿಗಳು ಇರುವುದಿಲ್ಲ. ಹಾಗೇ ಮನುಷ್ಯರಲ್ಲಿಯೂ ಕೂಡ ಒಂದೇ ವಿಚಾರಧಾರೆದವರು ಇರಲು ಸಾಧ್ಯವಿಲ್ಲ. ಒಬ್ಬರು ಸತ್ಯ ಶುದ್ಧ ಶಾಂತಿ ಪ್ರೀಯರು, ಇನ್ನೂ ಕೆಲವರು ಅಹಂಕಾರ ಭಾವನೆದವರು, ಮತ್ತೆ ಕೆಲವರು ದುಷ್ಟರು, ಅಜ್ಞಾನಿಗಳು ಇರುತ್ತಾರೆ. ಮನುಜ ಪಥ ಬಿಟ್ಟು ಅವಗುಣ ಬೆಳೆಸುಕೊಂಡು ಹೋಗುವರನ್ನು ನ್ಯಾಯಪಥಕ್ಕೆ ಬರುವಂತೆ ಸೂಚಿಸುತ್ತಾನೆ. ಕುರಿಯ ಹಿಂಡು ತೊರೆದು ಅಡ್ಡದಾರಿ ಹಿಡಿದು ಹೋಗುವ ಸೊಕ್ಕೇರಿದ ಟಗರನ್ನು ಕೋಲಿನಿಂದ ಬಾರಿಸಿ ಸತ್ಪಥದಲ್ಲಿ ಹೋಗುವಂತೆ ತಿರುಗಿಸುತ್ತೇನೆಂದು ಹೇಳುತ್ತಾನೆ. ಹಾಗೇ ಮನುಷ್ಯ ಕೂಡ ಸಾರ್ಥಕ ಜೀವನಕ್ಕೆ ಅವಶ್ಯವಾದ ಸದ್ಗುಣಗಳಿಗೆ ಒಳಗೊಳ್ಳದ ಕಾರಣ ಒಮ್ಮೊಮ್ಮೆ ಕೆಟ್ಟ ಪ್ರವೃತ್ತಿಗಳಿಗೆ ದಾಸನಾಗುತ್ತಾನೆ. ಅಂತಹ ದಾರಿಬಿಟ್ಟವರನ್ನು ಸರಿಪಡಿಸಲು ಪ್ರಜ್ಞಾವಂತರ ಅಗತ್ಯವಿದೆ. ಎಲ್ಲಿ ಕತ್ತಲೆ ಆವರಿಸುತ್ತದೆಯೋ ಅಲ್ಲಿ ಸುಜ್ಞಾನದ ಬೆಳಕು ಹರಿಯಬೇಕು, ಅಂತಹ ಕೋಲು ನಮ್ಮ ಕೈಯಲ್ಲಿ ಇರಬೇಕು ಎನ್ನುವ ರೂಪಕದ ನುಡಿಗಳು ಶರಣರು ಹೇಳುತ್ತಾರೆ. ಜೀವನದ ಸತ್ಪಥ ಕಂಡುಕೊಳ್ಳದವರು ಮದ, ಮತ್ಸರ, ಅಹಂಕಾರ ಎಂಬ ವ್ಯಸನಗಳಿಗೆ ಒಳಪಡುತ್ತಾರೆ. ಸೊಕ್ಕೇರಿದ ಟಗರು ಹಾಗೇ ಮನುಷ್ಯ ಕೂಡ ಒಮ್ಮೊಮ್ಮೆ ತನ್ನ ನೀಚ ಬುದ್ಧಿ, ಕೌರ್ಯ, ಹಿಂಸೆ, ಶೌರ್ಯ ಪ್ರದರ್ಶಿಸಲು ಮುಂದಾಗುತ್ತಾನೆ.ಇಂತಹ ದುರ್ಗುಣ, ದುರ್ಬುದ್ಧಿಯನ್ನು ಸರಿಪಡಿಸಲು ಶರಣರ ಮಾರ್ಗದರ್ಶನ, ಒಡನಾಟ, ತೀರ ಅಗತ್ಯವಿದೆ. ಇಂದು ಸಮಾಜದಲ್ಲಿ ಜೀವಪರ, ಜನಪರ ವಿಚಾರಧಾರೆಯ ವ್ಯಕ್ತಿತ್ವಗಳ ಸಂಖ್ಯೆ ಹೆಚ್ಚಾಗಬೇಕಾಗಿದೆ. ಮದವೇರಿದ ಟಗರುಗಳ ಸೊಕ್ಕು ಮುರಿಯಲು ಅಹಿಂಸೆಯೇ ಪರಮ ಅಸ್ತ್ರವಾಗಿದೆ. ಅದನ್ನು ಸಂಪ್ರೀತಿ, ಸುಜ್ಞಾನದ ದಾರಿ ಎಂದು ಕರೆಯುತ್ತೇವೆ. ಕುರಿಗಳ ಹಿಂಡಿನೊಳಗೆ ತಿರುಗಾಡುವ ಅನುಭಾವಿ ವಚನಕಾರ ವೀರಗೊಲ್ಲನು ಕುರಿಗಳ ಜೊತೆಗಿನ ತನ್ನ ಒಡನಾಟದ ಅನುಭವ ತತ್ವಸಾರ ಮನುಷ್ಯನ ಬದುಕಿಗೆ ಕೇಂದ್ರಿಕರಿಸಿ ಬೋಧಿಸಲು ಪ್ರಯತ್ನಿಸುತ್ತಾನೆ. ಈ ವಿಕಾರ ಬಿಡಿಸಿ ನನ್ನೊಳಗೆ ಅಡಗಿರುವ ಘನಜ್ಞಾನ ಕರುಣಿಸು, ನಿನ್ನ ನಿಜ ಸ್ವರೂಪ ತೋರುವ ಮೂಲಕ ನನ್ನ ಅರಿವಿನ ಬೆಳಕು ತೋರಯ್ಯಾ ಎಂದು ಬೇಡುತ್ತಾನೆ. ದೇವರ ದಿವ್ಯ ಜ್ಞಾನಕ್ಕಾಗಿ ‘ಶರಣ ಮಾರ್ಗ’ದಲ್ಲಿ ಇರಿಸು ನನ್ನೊಡೆಯನೇ ಎಂದು ಆಧ್ಯಾತ್ಮ ಗುರು ವೀರಬೀರೇಶ್ವರನಲ್ಲಿ ಬಿನ್ನಹಿಸಿಕೊಳ್ಳುತ್ತಾನೆ. ಬಸವಣ್ಣನವರ ಸ್ಥಾಪಿಸಿದ ಶರಣಮಾರ್ಗ ಸಾತ್ವಿಕ ಬದುಕಿನ ಸತ್ಪಥ ತೋರಿಸುತ್ತದೆ. ಶರಣರು ಕಾಯಕದ ಮೂಲಕ ಆತ್ಮಜ್ಞಾನ ಪಡೆದುಕೊಂಡು ದೈನಂದಿನ ಜೀವನಕ್ಕೆ ಒಳಗೊಳ್ಳುವಂತೆ ಸೂಚಿಸುತ್ತಾರೆ. ಜೀವನದಲ್ಲಿ ಎದುರಾಗುವ ಬಹುತೇಕ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಇದ್ದೆ ಇರುತ್ತದೆ. ಆದರೆ ಪರಿಹಾರ ಕಂಡುಕೊಳ್ಳಲು ಬಹುತೇಕರು ವಿಫಲರಾಗುತ್ತಾರೆ. ಅದಕ್ಕೆ ಜ್ಞಾನ, ತಾಳ್ಮೆ, ಕಾಲ, ಸತ್ಯ ಮತ್ತು ಧೈರ್ಯದ ಅಗತ್ಯವಿದೆ. ಕಾಯಕದ ಅನುಭಾವದ ಮೂಲಕ ಜ್ಞಾನ ಚೈತನ್ಯ ವೃದ್ಧಿಸಿಕೊಳ್ಳಲು ಸಾಧ್ಯವಾಗಿದೆ. ಈ ದಿಸೆಯಲ್ಲಿ ಬಸವಾದಿ ಶರಣರು ಜೀವನ ಚೈತನ್ಯರಾಗಿ, ವಿಶ್ವಮಾನವರಾಗಿ ಜಗತ್ತಿಗೆ ಮಾದರಿಯಾಗಿದ್ದಾರೆ. ಶರಣರ ಜೀವನ ದರ್ಶನದ ಅನುಭಾವ ಸಾರ್ವಕಾಲಿಕ ಸತ್ಯವಾಗಿದೆ‌. ಶರಣರ ವಚನ ಅನುಭವದ ಮಾನವೀಯ ಮೌಲ್ಯಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿವೆ. “ಕಲ್ಲು ಲಿಂಗವಲ್ಲ, ಉಳಿಯ ಮೊನೆಯಲ್ಲಿ ಒಡೆಯಿತ್ತು.ಮರ ದೇವರಲ್ಲ, ಉರಿಯಲ್ಲಿ ಬೆಂದಿತ್ತು.ಮಣ್ಣು ದೇವರಲ್ಲ, ನೀರಿನ ಕೊನೆಯಲ್ಲಿ ಕದಡಿತ್ತು.” ಶರಣ ವೀರಗೊಲ್ಲಾಳ ಮತ್ತೊಂದು ವಚನದಲ್ಲಿ ಕಲ್ಲು, ಮಣ್ಣು, ಮರ ದೇವರಲ್ಲ, ಕಲ್ಲು ದೇವರು ಉಳಿಗೆ ಹೆದರಿತು, ಮರ.ದೇವರು ಉರಿಗೆ ಬೆಂದಿತು, ಮಣ್ಣು ದೇವರು ನೀರಿನಲ್ಲಿ ಕರಗಿತು. ಇಂತಹ ದೇವರು ದೇವರಲ್ಲ ಎನ್ನುವ ತಾತ್ವಿಕ ಚಿಂತನೆ ಶರಣ ವೀರಗೊಲ್ಲನು ದಾಖಲಿಸುತ್ತಾನೆ. ಒಬ್ಬ ಸಾಮಾನ್ಯ ಕಾಯಕ ಜೀವಿ, ಇಂತಹ ಅನನ್ಯವಾದ ತತ್ವಪರಿಭಾಷೆಯ ವಚನಗಳು ರಚಿಸಿರುವುದು ಈ ನೆಲದ ಹೆಮ್ಮೆ ಎಂದಷ್ಟೇ ಹೇಳಬಹುದು. ಶರಣರ ಸಂದೇಶಗಳನ್ನು ಮತ್ತೆ ಮುನ್ನೆಲೆಗೆ ಬಂದರೆ ಈ ನೆಲ ಶಾಂತಿ, ಸೌಹಾರ್ದತೆ ಹಾಗೂ ಕಲ್ಯಾಣ (ಸಮ ಸಮಾಜ) ರಾಜ್ಯವಾಗಿ ರೂಪುಗೊಳ್ಳಲು ಸಾಧ್ಯವಿದೆ. *****************************

ಸಜ್ಜನರ ಸಂಗ ಲೇಸು ಕಂಡಯ್ಯಾ…! Read Post »

ಇತರೆ, ಪ್ರಬಂದ

ಪಾತ್ರೆಗಳ ಲೋಕದಲ್ಲಿ..

ಲಲಿತ ಪ್ರಬಂಧ ಪಾತ್ರೆಗಳ ಲೋಕದಲ್ಲಿ.. ಜ್ಯೋತಿ ಡಿ.ಬೊಮ್ಮಾ. ಹಬ್ಬಗಳಲ್ಲೆ ದೊಡ್ಡ ಹಬ್ಬ ದಸರಾ .ನಮ್ಮ ಉತ್ತರ ಕರ್ನಾಟಕದಲ್ಲಿ ಮತ್ತು ಮಹಾರಾಷ್ಟ್ರದ ಕೆಲವು ಕಡೆ ಈ ಹಬ್ಬವನ್ನು ಅಂಬಾ ಭವಾನಿಯ ಹೆಸರಿನಲ್ಲಿ ಆಚರಿಸಲಾಗುತ್ತದೆ.ಪ್ರತಿಯೊಬ್ಬರ ಮನೆಗಳು ದಸರಾ ಹಬ್ಬಕ್ಕೆ ಸುಣ್ಣ ಬಣ್ಣ ಬಳಿದುಕೊಂಡು ದೇವಿಯ ಪ್ರತಿಷ್ಟಾಪನೆಗೆ ಸಜ್ಜುಗೊಳ್ಳುತ್ತವೆ. ನಾವು ಚಿಕ್ಕವರಿದ್ದಾಗ ಮನೆಗೆ ಸುಣ್ಣ ಬಣ್ಣ ಮಾಡುವ ಸಂದರ್ಭ ತುಂಬಾ ಸಂತೋಷದಾಯಕವಾಗಿರುತಿತ್ತು.ಆ ಸಂದರ್ಭ ದಲ್ಲಿ ಮನೆಯೊಳಗಿನ ಎಲ್ಲಾ ವಸ್ತುಗಳು ಅಂಗಳಕ್ಕೆ ಬಂದು ಬೀಳುತಿದ್ದವು. ಮನೆಯ ಹಿರಿಯರು ಡಬ್ಬದೊಳಗಿನ ದವಸ ಧಾನ್ಯಗಳನ್ನು ಒಣಗಿಸಿ ಪಾತ್ರೆಗಳನ್ನು ತೊಳೆಯುವಲ್ಲಿ ವ್ಯಸ್ತರಾದರೆ , ಚಿಕ್ಕವರು ಕೈ ಕಾಲಿಗೆ ತೊಡರುವ ಪಾತ್ರೆಗಳ ನಡುವೆ ಸಂಭ್ರಮ ದಿಂದ ಓಡಾಡುತ್ತ ಎನೋ ಖುಷಿ ಅನುಭವಿಸುತ್ತಿದ್ದೆವು.ತಮ್ಮ ಮುರಿದ ಹೋದ ಆಟಿಕೆಗಳು ಹಳೆ ಪುಸ್ತಕಗಳು ಎಂದೋ ಕಳೆದು ಹೋದ ಪೆನ್ನು ಪೆನ್ಸಿಲ್ ಗಳು ಸಿಕ್ಕಾಗ ಅವನ್ನು ಹೆಕ್ಕಿ ತೆಗೆದು ಜೋಪಾನವಾಗಿ ಎತ್ತಿಕ್ಕಿಕೊಂಡು ಸಂಭ್ರಮಿಸುತಿದ್ದೆವು.ಆಗ ಆ ಹಳೆಯ ಮುರಿದ ವಸ್ತುಗಳಲ್ಲಿ ಕಂಡುಕೊಳ್ಳುತ್ತಿದ್ದ ಖುಷಿ ಈಗಿನ ಯಾವ ವಸ್ತುವಿನಲ್ಲು ದೊರಕದು. ಮನೆ ಕ್ಲೀನ್ ಮಾಡುವ ಸಂದರ್ಭದಲ್ಲಿ ಹಿರಿಯರು ಕಿರಿಯರು ಎಲ್ಲರೂ ಸಕ್ರಿಯವಾಗಿ ಭಾಗವಹಿಸುವವರೆ.ಕೆಲಸದ ಒತ್ತಡದ ನಡುವೆಯೂ ಏನೋ ಸಂಭ್ರಮ. ಮನೆಯ ಮೂಲೆ ಮೂಲೆಗಳನ್ನೆಲ್ಲ ಸ್ವಚ್ಛಗೊಳಿಸಿ ಮನೆಗೆ ಸುಣ್ಣದ ಬಿಳಿಯ ಹೊಳಪು ಕೊಟ್ಟಾಗ ಮನೆಯೊಂದಿಗೆ ಮನೆಯವರಲ್ಲೂ ಹೊಸತನದ ಅನುಭೂತಿ ಮೂಡುತಿತ್ತು. ಅಟ್ಟದ ಮೇಲಿನ ಬಳಸದೆ ಇರುವ ತಾಮ್ರ ಹಿತ್ತಾಳೆ ಪಾತ್ರೆಗಳನ್ನೆಲ್ಲ ತೆಗೆದು , ಉಪ್ಪು ಹುಣಸೆಹಣ್ಣಿನಿಂದ ತಿಕ್ಕಿ ಹೊಳಪು ಬರಿಸಿ ಬಿಸಿಲಿಗೆ ಒಣಗಿಸಿ ಮತ್ತೆ ಅಟ್ಟದಲ್ಲೆ ವಿರಾಜಮಾನವಾಗಿಸುವದು ಒಂದು ಮಹತ್ಕಾರ್ಯವೆ .ಮನೆಯೊಳಗಿನ ಹೊಸ ಹಳೆ ಪಾತ್ರೆಗಳನ್ನು ತಿಕ್ಕುತ್ತ ಅಮ್ಮ ಅಜ್ಜಿಯರು ತಮ್ಮ ಜೀವಮಾನದೊಂದಿಗೆ ಸಾಗಿ ಬಂದ ಪಾತ್ರೆಗಳ ಲೋಕದಲ್ಲಿ ವಿಹರಿಸುತಿದ್ದರು. ಎಷ್ಟೊ ವರ್ಷದಿಂದ ಬಳಸಿ ಸವಕಲಾದ , ಹಿಡಿಕೆ ಮುರಿದ ,ನೆಗ್ಗು ಬಡಿದ ಪಾತ್ರೆಗಳು ಉಪಯೋಗಕ್ಕೆ ಬರದಿದ್ದರು ಬಿಸಾಡುವ ಮನಸ್ಸಾಗದೆ ಒಂದು ದೊಡ್ಡ ಡಬ್ಬದಲ್ಲಿ ತುಂಬಿಡಲಾಗುತಿತ್ತು.ಜೀವಮಾನದ ಇಡುಗಂಟಿನಂತೆ. ನನಗೆ ತಿಳುವಳಿಕೆ ಬಂದ ನಂತರ ಮನೆಯ ಅನುಪಯುಕ್ತ ಪಾತ್ರೆಗಳನ್ನೆಲ್ಲ ಗುಜರಿಗೆ ವರ್ಗಾಯಿಸಿದಾಗ ನನಗೂ ಅಮ್ಮನಿಗೂ ರಂಪಾಟವೆ ಆಗಿತ್ತು.ಹಳೆತನವೆಂದರೆ ಹಾಗೆ ಎನೋ ,ಇಟ್ಟುಕೊಳ್ಳಲು ಆಗದೆ ಬಿಸಾಡಲು ಆಗದೆ ಇಬ್ಬಂದಿತನ.ಆದರೂ ವಸ್ತುಗಳೆ ಆಗಲಿ ವ್ಯಕ್ತಿಯೆ ಆಗಲಿ ಹಳತಾದಂತೆ ನಮ್ಮೊಂದಿಗೆ ಬೆಸೆದು ಬಿಡುತ್ತವೆ.ನಮ್ಮೊಂದಿಗೆ ಒಂದಾಗಿ ಬಿಡುತ್ತವೆ. ನಿರ್ಜೀವ ಪಾತ್ರೆಗಳು ಒಂದೊಂದು ಪದಾರ್ಥಗಳ ಹೆಸರಿನಿಂದ ಕರೆಸಿಕೊಳ್ಳುತ್ತವೆ.ಹಾಲಿನ ಪಾತ್ರೆ ಮೊಸರಿನ ಗಿಂಡಿ ,ಮಜ್ಜಿಗೆ ಗ್ಲಾಸ್ , ಅನ್ನದ ತಪ್ಪಲೆ ,ಸಾರಿನ ಬೋಗುಣಿ ,ಪಲ್ಯದ ಕಡಾಯಿ ಇನ್ನೂ ಅನೇಕ..ಪ್ರತಿ ಮನೆಯಲ್ಲೂ ಪಾತ್ರೆಗಳು ಕೇವಲ ಪಾತ್ರೆಗಳಾಗಿರದೆ ಆ ಮನೆಯ ಗೃಹಿಣಿಯರ ಒಡನಾಡಿಗಳಾಗಿರುತ್ತವೆ.ಮನೆಯವರ ಹಸಿವು ತಣಿಸುವ ಅಕ್ಷಯ ಪಾತ್ರೆಗಳಾಗಿರುತ್ತವೆ. ಮನೆಯಲ್ಲಿರುವ ಹಣ ಒಡವೆಯ ನಿಖರವಾದ ಸಂಖ್ಯೆಯ ನೆನಪು ಇರದಿರಬಹುದು.ಆದರೆ ತಮ್ಮ ಮನೆಯಲ್ಲಿರುವ ಪಾತ್ರೆಗಳ ತಟ್ಟೆ ಲೋಟಗಳು ಎಷ್ಟಿವೆ ಎಂದು ನೆನಪಿರದ ಗೃಹಿಣಿ ಇರಲಿಕ್ಕಿಲ್ಲ.ಸಾಕಷ್ಟು ಪಾತ್ರೆಗಳಿದ್ದರು ಅದರಲ್ಲಿ ಒಂದು ಕಾಣೆಯಾದರು ಅಥವಾ ಪಕ್ಕದ ಮನೆಯವರಿಗೆ ಕೊಟ್ಟಿದ್ದರು ಅವರು ವಾಪಸು ಕೊಡುವದು ಸ್ವಲ್ಪ ತಡವಾದರು ನೆನಪಿಸಿ ಪಡೆದುಕೊಳ್ಳುವದರಲ್ಲಿ ಮುಜುಗುರ ಪಟ್ಟುಕೊಳ್ಳಲಾರೆವು. ನಾಗರಿಕತೆ ಬದಲಾದಂತೆಲ್ಲ ಪಾತ್ರೆಗಳು ಬದಲಾದವು.ಈಗ ಇರುವ ನಾನ್ ಸ್ಟಿಕ್ ಪಾತ್ರೆಗಳು ಮುಟ್ಟಿದರೆ ಜರುಗುವಂತಹವು.ನನಗೆ ಸ್ಟೀಲ್ ಮತ್ತು ಅಲೂಮಿನಿಯಮ್ ಪಾತ್ರೆಗಳ ಮೇಲೆ ಇರುವ ಮಮತೆ ಈ ನಾನ್ ಸ್ಟಿಕ್ ಪಾತ್ರೆಗಳ ಮೇಲೆ ಮೂಡಲೆ ಇಲ್ಲ. ಈಗ ಪ್ಲಾಸ್ಟಿಕ್ ಪೊಟ್ಟಣಗಳಲ್ಲಿ ಆಹಾರ ಹೊರಗಿನಿಂದ ಕಟ್ಟಿಸಿಕೊಂಡು ಬಂದು ಬಿಚ್ಚಿ ಅದರಲ್ಲೆ ಊಟ ಮಾಡುವ ಧಾವಂತದ ಜನರಿಗೆ ಪಾತ್ರೆಗಳ ಅವಶ್ಯಕತೆಯು ಅಷ್ಟಾಗಿ ಕಾಣದು. ಹಿಂದಿನವರಂತೆ ದೊಡ್ಡ ದೊಡ್ಡ ಪಾತ್ರೆಗಳಲ್ಲಿ ಬೇಯಿಸುವ ಅವಿಭಕ್ತ ಕುಟುಂಬಗಳು ಕಾಣೆಯಾಗಿವೆ .ಇಬ್ಬರು ನಾಲ್ವರು ಇರುವ ಮನೆಗಳಲ್ಲಿ ಇರುವ ಪಾತ್ರೆಗಳು ಅವರ ಎರಡರಷ್ಟೆ. ಕೆಲವರು ಪಾತ್ರೆಗಳನ್ನು ತೊಳೆಯುವ ತಾಪತ್ರಯ ತಪ್ಪಿಸಿಕೊಳ್ಳಲು ಬಳಸಿ ಬಿಸಾಡುವ ತಟ್ಟೆ ಲೋಟಗಳನ್ನೆ ದಿನಾಲು ಉಪಯೋಗಿಸುವರು. ಕೆಲಸದ ಹೊರೆ ಕಡಿಮೆಯಾದಷ್ಟೂ ಮಾಲಿನ್ಯ ಹೆಚ್ಚುತ್ತಲೆ ಇದೆ. ಮಹಿಳೆಯರಿಗೂ ಮತ್ತು ಪಾತ್ರೆಗಳಿಗೂ ಇರುವ ನಂಟು ನಿರಂತರ ಬೆಸೆದಿರುವದು.ಬೆಳಗಾದರೆ ಗೃಹಿಣಿಯರ ಕೈಯಲ್ಲಾಡುವ ಪಾತ್ರೆಗಳ ಟಿನ್ ಟಿನಿ ನಾದ ಪ್ರತಿ ಮನೆಯ ಸುಪ್ರಭಾತ.ಅದರೊಂದಿಗೆ ಮನೆಯವರ ಮತ್ತೊಂದು ಭರವಸೆಯ ಬೆಳಕಿನ ಉದಯ. ******************************************************

ಪಾತ್ರೆಗಳ ಲೋಕದಲ್ಲಿ.. Read Post »

ಇತರೆ, ಜೀವನ

ಖುಷಿ ನಮ್ಮಲ್ಲೇ!!!

ಲೇಖನ ಖುಷಿ ನಮ್ಮಲ್ಲೇ!!! ಮಾಲಾ ಅಕ್ಕಿಶೆಟ್ಟಿ  ಕೈಯಲ್ಲಿ10 ರ ನೋಟು ಹಿಡಿದುಕೊಂಡು ಬಡ ಹುಡುಗ ರೋಡ್ ಮೇಲೆ ಇರುವ ಭಜಿ ಅಂಗಡಿಗೆ ಬಂದಿದ್ದ. ಆಸೆ ಕಂಗಳಿಂದ ಮೂರು ತರಹದ ಭಜಿ, ‌ಅಂದರೆ ‌ಕಾಂದಾ, ‌ಮಿರ್ಚಿ ‌ಮತ್ತು ‌ಮೈಸೂರ ‌ಭಜಿಯನ್ನು ‌‌ಒಂದೇ ‌ಸಮನೇ ನೋಡಿದ. ‌ಆ ‌ಅಂಗಡಿಯಲ್ಲಿ 4 ‌ಭಜಿಗಳ ‌ಪ್ಲೇಟ್ಗೆ 20 ‌ರೂಪಾಯಿ.ಒಂದು ಭಜಿಯನ್ನು ಕೊಡುವ ಸೌಲಭ್ಯವಿರುವದರಿಂದ 5ರೂಪಾಯಿಗೆ ‌ಯಾವುದಾದರು ‌ಭಜಿ ‌ತಿನ್ನಬಹುದು.ಆತ ‌ಡಿಸೈಡ್ ‌ಮಾಡಿ 5 ರೂ ‌ಕೊಟ್ಟು ‌ಮಿರ್ಚಿ ‌ಭಜಿಯನ್ನು ಸವಿದ.ಬಸಿಯಾಕಾರದಲ್ಲಿ ಕಣ್ಣು ತೆರೆದು, ಬಾವಿಯಂಥ ಬಾಯಲ್ಲಿ ಹಾಕಿ ಸುತ್ತಲೂ ನೋಡುತ್ತಾ ‌‌ಭಜಿಯನ್ನು ‌ಆತ್ಮೀಯತೆಯಿಂದ ಅನುಭವಿಸಿದ. ಹೊರಗೆ ‌ಧೋ ‌ಧೋ ಅನ್ನುವ ಎಡಬಿಡದ ಮಳೆ, ಅಲ್ಲಲ್ಲಿ ಛತ್ರಿಗಳ ಸಹಾಯದಿಂದ ಜನರ ಓಡಾಟ,‌ ‌ಜೋರ ‌ಮಳೆಯಲ್ಲಿ,ರೋಡ ‌ಖಾಲಿಯಾದ್ದರಿಂದ, ‌ಬುರ್ ಬುರ್ ಎಂದು ಹೋಗುವ ವಾಹನಗಳು ಮಳೆಗೆ ಕಳೆ ತಂದಿದ್ದವು.ಆ ಚಿಕ್ಕ ಅಂಗಡಿಯಲ್ಲಿ ಎಲ್ಲರೂ ಜಮಾಯಿಸಿ ಮಳೆ ನಿಂತರಾಯ್ತು,‌‌ ಹೊರಗೆ ಕಾಲಿಡುವಾ ಅನ್ನುವ ಸಾಂದರ್ಭಿಕ ನಿರ್ಣಯ. ಇನ್ನೂ 5 ‌ರೂಪಾಯಿ ಉಳಿದಿತ್ತಲ್ಲ, ‌ಅದರಿಂದ ಮೈಸೂರು ‌ಭಜಿ ತೆಗೆದುಕೊಂಡು ಬೇಕಾದಷ್ಟು ಸಾಸ್ ‌ಮೆತ್ತಿಸಿ,‌ ಮತ್ತೆ ಆನಂದದಿಂದ ಸವಿದ.ಇವನೊಂದಿಗೆ ಬಂದ ಇನ್ನುಳಿದ ಎರಡು ಹುಡುಗರೂ ‌ಥೇಟ್ ‌ಇವನಂಗೆ ‌ಸಂತೋಷ. ಅಬ್ಬಾ!!! ‌‌5 ರೂನಲ್ಲಿ ಒಂದು ‌ಭಜಿ ಕೊಡುವ ಆನಂದ ಯಾವ ಫೈವ್ ‌ಸ್ಟಾರ್ ಹೋಟೆಲ್ ನಲ್ಲಿ ಸಿಗುತ್ತೆ?                            ರೋಡಿನಲ್ಲಿಯ ಗೂಡಂಗಡಿಗಳಲ್ಲಿ ಆಹಾರ ಸರಿಯಿರಲ್ಲ,‌low quality ಎಣ್ಣೆ, ಕಾಳು, ಹಿಟ್ಟು ಬಳಸಿರುತ್ತಾರೆ, ಸ್ವಚ್ಛತೆ ಕಡಿಮೆ, ಆರೋಗ್ಯಕ್ಕೆ ಹಾನಿ ಎನ್ನುವುದೇನೋ ಸರಿ. ಆದರೆ ದೊಡ್ಡ ದೊಡ್ಡ ಹೋಟೆಲ್ಗಳಲ್ಲಿಯ ಎಣ್ಣೆ, ಕಾಳು, ಹಿಟ್ಟು ಸ್ವಚ್ಛತೆಯನ್ನು ಸಾಮಾನ್ಯನು ‌ಪರೀಕ್ಷಿಸಲಾಗುತ್ತಾ? ಹೊರಗಡೆ ಲಕಲಕ ಹೊಳೆದು ಒಳಗೆ ರೋಡ್ ಅಂಗಡಿಗಿಂತ  ‌ಕೀಳಿದ್ದರೆ ವ್ಯತ್ಯಾಸವೇನು? 5 ರೂ ನಲ್ಲಿ ಸಿಗುವ ಇಂಥದ್ದೇ ‌ಭಜಿ, ದೊಡ್ಡ ಹೋಟೆಲ್ ನಲ್ಲಿ ‌ಸುಮಾರು ‌20 ರೂಪಾಯಿ‌ಯಾದರೂ ಇರುತ್ತೆ. ಲೋ ಕ್ವಾಲಿಟಿ ಎಂದು ಬಡ ಹುಡುಗ ನಿಂತರೆ, ಎಂದು ‌ಆತ ಒಂದು ‌ಭಜಿ ‌ತಿಂದಾನು? ರೋಡ್ ನಲ್ಲಿ ತಿಂದ ಎಲ್ಲರ ಆರೋಗ್ಯ ಹಾಳಾಗುವುದರೆ, ಹೋಟೆಲ್ನಲ್ಲಿ ತಿಂದವರಿಗೆ ರೋಗವೇ ಬರಲ್ಲವೇ? ಅಥವಾ ದೊಡ್ಡ ಹೋಟೆಲ್ ನಲ್ಲಿ ತಿಂದವರ ಆರೋಗ್ಯ ಎಂದೂ ಕೊಡುವುದಿಲ್ಲವೇ? ಒಟ್ಟಾಗಿ ಹೇಳುವ ತಾತ್ಪರ್ಯ ಅವರವರ ಇಮ್ಯೂನಿಟಿ ಪವರ್ ಮೇಲೆ ಆರೋಗ್ಯ ನಿಂತಿದೆ.          ಬಡವನೊಬ್ಬ ಒಳ್ಳೆ ಹೋಟೆಲ್ ನಲ್ಲೇ ತಿನ್ನಬೇಕೆಂದರೆ ಎಷ್ಟು ಜನ್ಮ ಆತ ಕಾಯಬೇಕು? ಯಾರಿಗ್ಗೊತ್ತು? ರೋಡ್ ನಲ್ಲಿಯ ‌ಅಂಗಡಿಗಳಿಂದ ಎಟ್ಲೀಸ್ಟ್ ಈ ‌ಈ ತಿನಿಸುಗಳು ಹೀಗೆಯೇ ಇರುತ್ತವಪ್ಪಾ  ಎನ್ನುವ ಕಲ್ಪನೆಯಾದರೂ ಬಡವರಿಗೆ ಬಂದೀತು. ಇಲ್ಲಾದರೆ ರುಚಿ ಕೂಡ ‌ಬರೀ ಕಲ್ಪನೆಯಲ್ಲಿ ಅನುಭವಿಸಬೇಕಾಗಬಹುದು.ದೊಡ್ಡ ಹೋಟೆಲ್ ನಲ್ಲಿ ಇಬ್ಬರ ನಾಷ್ಟಾ ಸುಮಾರು 600 ರೂಪಾಯಿ.‌ಇದು ಬಡವನ ‌ತಿಂಗಳ ‌ಸಂಬಳವೂ ಹೌದು.        ಈ ‌ದೊಡ್ಡ ಹೋಟೆಲ್ ನಲ್ಲಿ ಇದನ್ನು ತಿಂದೇ, ಇಷ್ಟು ಬಿಲ್ ‌ಬಂತು, ‌ಆದ್ರೂ ಎಂಜಾಯ್ ಮಾಡಿದೆ ಎನ್ನುವ, ಅದೇ ಒಂದು ಸಿನಿಮಾ ಸಾಮಾನ್ಯ ಥೇಟರ್ನಲ್ಲಿ ನೋಡಲು ಸಿಕ್ಕಾಗೂ ಆ ದೊಡ್ಡ ಥಿಯೇಟರ್ನಲ್ಲಿ ನೋಡಿದೆ, ಫಸ್ಟ್ ಡೇ, ಫಸ್ಟ್ ಶೋ ಎಂದು ಒಂದು ಟಿಕೆಟ್ಗೆ ಇಷ್ಟು ದುಡ್ಡಿತ್ತು ಗೊತ್ತಾ? ಆದ್ರೂ ಸಂತೋಷ ಆತು ಅಂತ ಹೇಳುವ ಮನುಜರು ಇದ್ದಾರೆ. ಇರಲಿ, ಅವರಿಗೆ ಇರುವ ಆದಾಯದ ಮೇಲೆ ಅವರು ಆಯಾ ಹೋಟೆಲ್ ಹಾಗೂ ಥಿಯೇಟರ್ಗಳಿಗೆ ಹೋಗುತ್ತಾರೆ ಎನ್ನೋಣ. ಆದರೆ ತಾವು ಮಾಡಿದ್ದೇ ಶ್ರೇಷ್ಠ, ಬೇರೆಯವರದು ಕನಿಷ್ಠ ಅಂದರೆ ಹೇಗೆ? ಎಷ್ಟೋ ಶ್ರೀಮಂತರ ಮನೆಯಲ್ಲಿ ಲಕ್ಷ್ಮಿ ಕಾಲುಮುರಿದುಕೊಂಡು ಬಿದ್ದಿದ್ದರೂ ದುಂದು ವೆಚ್ಚ ಮಾಡಿಲ್ಲ. ದೊಡ್ಡ ಹೋಟೆಲ್ ಅಥವಾ ಥೇಟರ್ ಗಳ ವಿರೋಧ ಇಲ್ಲಿ ಇಲ್ಲ. ಆದರೆ ಅಂಥದ್ದೇ ವಾತಾವರಣ ಸಾಮಾನ್ಯ ಸ್ಥಿತಿಯಲ್ಲಿ ಬಡವರಿಗೆ ಸಿಕ್ಕಾಗ ಅದನ್ನು ಶ್ಲಾಘೀಸೋಣ ಎನ್ನುವ ಕಳಕಳಿ.ಅದು ಅವರ ದುಡ್ಡು, ಹೇಗಾದರೂ ಖರ್ಚು ಮಾಡಿಕೊಳ್ಳಲಿ                           ಸಾಮಾನ್ಯರಿಗೆ ಸಾಮಾನ್ಯವಾದ ವಸ್ತುಗಳು ಈ ಜಗತ್ತಿನಲ್ಲಿ ಸಿಗುತ್ತಿರುವುದರಿಂದಲೇ ಅವರಿಗೂ ಎಲ್ಲದರ ರುಚಿ ಗೊತ್ತಾಗಿದೆ. ಬಡವರಿಂದಲೇ ನಡೆಸಲ್ಪಡುವ ಅಂಗಡಿಗಳು ಬಡವರ ಜೀವಾಳ. ಬಡ ಅಂಗಡಿ ಮಾಲೀಕನಿಗೆ ಹೆಚ್ಚಿನ ಆದಾಯದ ಚಿಂತೆಯಿಲ್ಲ. ತನ್ನಂತೆ ಜನ ಅಂದು ಇದ್ದದ್ದರಲ್ಲೇ ತುಸು ಲಾಭ ಗಳಿಸುವ ಆಸೆ. ಇದರಿಂದ ತನಗೂ ಲಾಭ ಜೊತೆಗೆ ತನ್ನಂಥವನಿಗೆ ಹೊಟ್ಟೆ ತುಂಬಿಸಿದೆ ಅನ್ನುವ ಧನ್ಯತಾ ಭಾವ. ಇಷ್ಟಿಷ್ಟರಲ್ಲೇ ಇಷ್ಟಿಷ್ಟದ ಖುಷಿಯನ್ನು ಹುಡುಕುವ ತವಕ. ಸಂತೃಪ್ತಿ ಜೀವನದ ಸೆಲೆ. ಇವುಗಳನ್ನು ಸ್ವೀಕರಿಸಿ ದೋಷಗಳನ್ನು ಬಹಿರಂಗಪಡಿಸದೇ ಆನಂದಿಸುವ ಘಳಿಗೆ. ಬಹುಶಃ ಇದಕ್ಕೇನೆ ವಿಶಾಲ ಮನೋಭಾವ ಅಂತ ಕರೀಬಹುದು. *************************************

ಖುಷಿ ನಮ್ಮಲ್ಲೇ!!! Read Post »

ಇತರೆ

ನಾವು ಕನ್ನಡಿಗರು’ – ಜಾಗತಿಕ ಸರಪಳಿಯ ಒಂದು ಕೊಂಡಿ

ಲೇಖನ ನಾವು ಕನ್ನಡಿಗರು’ ಜಾಗತಿಕ ಸರಪಳಿಯ ಒಂದು ಕೊಂಡಿ ಗಣೇಶ ಭಟ್ಟ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯ ಉದ್ದೇಶದಿಂದ ಭಾಷೆ , ಸಂಸ್ಕೃತಿ, ಪರಂಪರೆಯ ಭಾವಧಾರೆಯನ್ನು ಬಳಸಿಕೊಂಡು ಒಗ್ಗಟ್ಟು ಮೂಡಿಸುವ ಪ್ರಯತ್ನವನ್ನು ಪ್ರಾದೇಶಿಕತೆಯನ್ನು ಪ್ರೋತ್ಸಾಹಿಸಿ, ದೇಶವನ್ನು ದುರ್ಬಲಗೊಳಿಸುವ ಕಾರ್ಯವೆಂದು ಕೆಲವರು ಅಕ್ಷೇಪಿಸುತ್ತಾರೆ. ಹಲವು ವಿಧದ ಹೂವುಗಳನ್ನು ಬಳಸಿ ಹಾರ ತಯಾರಿಸಿದಾಗ ಅದರ ಸೌಂದರ್ಯ ಹಾಳಾಗುತ್ತದೆಂದು ಗೊಣಗುವುದು ಸಮಂಜಸವೆನಿಸಲಾರದು. ಪ್ರತಿಯೊಂದು ಹೂವಿಗೂ ಅದರದ್ದೇ ಆದ ಸ್ವರೂಪ, ವೈಶಿಷ್ಟತೆ, ಸೌಂದರ್ಯ ಇದ್ದರೂ ಎಲ್ಲಾ ವಿಧದ ಹೂಗಳನ್ನು ಸಮರ್ಪಕವಾಗಿ ಪೋಣಿಸಿ ಹಾರವನ್ನು ಸುಂದರವಾಗಿಸಲು ಸಾಧ್ಯ. ಅದೇ ರೀತಿಯಲ್ಲಿ ಪ್ರಾದೇಶಿಕ ವೈವಿಧ್ಯತೆಯನ್ನು ಕಾಪಾಡಿಕೊಂಡು ಸಧೃಡ ಮಾನವ ಸಮಾಜ ನಿರ್ಮಾಣ ಸಾಧ್ಯ. ಇತರ ದೇಶದ ಪ್ರಜೆಗಳನ್ನು ದ್ವೇಷಿಸುವುದರಿಂದಲೇ ತಮ್ಮ ದೇಶದ ಅಸ್ತಿತ್ವ ಉಳಿಯುತ್ತದೆಂಬಂತೆ ವರ್ತಿಸುವವರು ಮಾನವತೆಯ ವಿರೋಧಿಗಳು. ಪ್ರಾದೇಶಿಕತೆಗೆ ಪ್ರಾಶಸ್ತ್ಯ ನೀಡುವುದರಿಂದ ದೇಶದ ಐಕ್ಯತೆ ಹಾಳಾಗುತ್ತದೆಂದು ವಾದಿಸುವವರಿಗೆ ಮಾನವನ ಸ್ವಭಾವ ಮತ್ತು ದೇಶಾಭಿಮಾನದ ನೈಜತೆಯ ಅರಿವು ಇರುವುದಿಲ್ಲ ಅಥವಾ ಜಾತಿ, ಮತಗಳ ಭಾವೋದ್ವೇಗಕ್ಕೆ ಒಳಗಾಗಿರುತ್ತಾರೆ. ‘ ನಾವು ಕನ್ನಡಿಗರು’ ಎಂಬ ಮನೋಭಾವ ಕನ್ನಡ ನಾಡಿನಲ್ಲಿ ವಾಸಿಸುವ ಸಕಲರನ್ನೂ ಒಳಗೊಳ್ಳುವ, ಒಗ್ಗೂಡಿಸುವ ಸೈದ್ಧಾಂತಿಕ ನೆಲೆಗಟ್ಟಿನ ವ್ಯವಸ್ಥಿತ ಪ್ರಯತ್ನ. ಜಗತ್ತಿನ ಪ್ರತಿಯೊಂದು ಮೂಲೆಯಲ್ಲೂ ಆರ್ಥಿಕ ಸಾಮಾಜಿಕ ಅಭಿವೃದ್ಧಿಯಾಗಬೇಕು. ಪ್ರತಿಯೋರ್ವ ವ್ಯಕ್ತಿಗೂ ಉನ್ನತ ಬದುಕಿನ ಅವಕಾಶಗಳು ಲಭ್ಯವಾಗಬೇಕು ಎಂಬ ಆಶಯದ ಈಡೇರಿಕೆಗಾಗಿ ವಿಕೇಂದ್ರಿಕೃತ ಅರ್ಥನೀತಿಯ ಅನುಷ್ಠಾನ ಅನಿವಾರ್ಯ. ಇದಕ್ಕಾಗಿ ಆರ್ಥಿಕವಾಗಿ ಸ್ವಯಂ ಸ್ವಾವಲಂಬಿಯಾಗಿ ರೂಪುಗೊಳ್ಳಬಲ್ಲ ಪ್ರದೇಶಗಳನ್ನು ಗುರ್ತಿಸಿ, ಅಲ್ಲಿನ ಭಾಷೆ ಸಂಸ್ಕೃತಿ ಬದುಕಿನ ರೀತಿ ನೀತಿಗಳ ಸಾಮ್ಯತೆಯ ಆಧಾರದ ಮೇಲೆ ಜನರಲ್ಲಿ ಒಗ್ಗಟ್ಟನ್ನು ಮೂಡಿಸುವುದು ಅವಶ್ಯಕ. ಈ ಹಿನ್ನಲೆಯಲ್ಲಿ ಜಗತ್ತಿನಾಧ್ಯಂತ ೨೪೩ ಸ್ವಯಂ ಸ್ವಾವಲಂಬಿ ಸಧೃಡ ಸಾಮಾಜಾರ್ಥಿಕ ಘಟಕಗಳನ್ನು ಗುರ್ತಿಸಲಾಗಿದೆ. ‘ನಾವು ಕನ್ನಡಿಗರು’ ಎಂಬುದು ಸರಪಳಿಯ ಒಂದು ಕೊಂಡಿ. ವಿಶ್ವೈಕ್ಯ ದೃಷ್ಟಿಕೋನದ ಪ್ರಾದೇಶಿಕ ಅಭಿವ್ಯಕ್ತಿಯಾಗಿರುವ ಭಾರತದ ೪೪ ಹೂವುಗಳ ಹಾರದಲ್ಲಿ ‘ನಾವು ಕನ್ನಡಿಗರು’   ಕೂಡ ಒಂದು. ****************************************

ನಾವು ಕನ್ನಡಿಗರು’ – ಜಾಗತಿಕ ಸರಪಳಿಯ ಒಂದು ಕೊಂಡಿ Read Post »

ಇತರೆ

ಸಂತೆಯಲ್ಲಿ ನಿಂತ ಅವಳು

ಲೇಖನ ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು) ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು) ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು)             ಪ್ರಾಚೀನ ಕಾಲದಿಂದ ಇಂದಿನವರೆಗೂ ಮಾರುಕಟ್ಟೆಗೆ ಒಂದು ಆರೋಗ್ಯಕರವಾದ ನೀತಿ ಸಂಹಿತೆಯನ್ನು ರೂಪಿಸುವ ವಿವೇಕ ಮತ್ತು ವ್ಯವಧಾನ ಸಾಮುದಾಯಿಕ ಜವಾಬ್ದಾರಿಯಾಗಿ ಯಾವ ಕಾಲದಲ್ಲಿ ಯಾರಲ್ಲಿಯೂ ಕಾಣಿಸಿಕೊಂಡಿಲ್ಲ. ಆರೋಗ್ಯಕರ ಸಮಾಜಕ್ಕೆ ಲಾಭಗಳಿಕೆಯ ವ್ಯವಹಾರಿಕತೆಯನ್ನು ನಿಯಂತ್ರಿಸುವ ಶಕ್ತಿಯಿಲ್ಲದಿದ್ದರೆ ಇಡೀ ವ್ಯವಸ್ಥೆಯೇ ನರಳಬೇಕಾಗುತ್ತದೆ. ಮಾರುಕಟ್ಟೆ ಸಂಸ್ಕೃತಿ ಗಳಿಕೆಯ ತೂಗು ಕತ್ತಿಯನ್ನು ನಿರಂತರ ಗ್ರಾಹಕನ ಮೇಲೆ ಬೀಸುತ್ತಿರುತ್ತದೆ. ಇದರಿಂದ ವ್ಯಕ್ತಿ ಸಮಾಜಗಳು ಹಲವಾರು ಅಪಾಯಗಳಿಗೆ ಒಳಗಾಗಬೇಕಾಗುತ್ತದೆ.             ಭಾರತೀಯ ಸಮಾಜದಲ್ಲಿ ಹೆಣ್ಣನ್ನು ವ್ಯಕ್ತಿಯೆಂದು ಪರಿಗಣಿಸಿದ ಉದಾಹರಣೆಗಳಿಲ್ಲ. ಚರಿತ್ರೆಯುದ್ದಕ್ಕೂ ಹೆಣ್ಣನ್ನು ವಸ್ತು ಮುಖೇನವೆ ಗುರುತಿಸುವುದು ಯಾವ ಮಹಾತ್ಮರಿಗೂ ಅಪರಾಧವಾಗಿ ಕಾಣಿಸಿಲ್ಲ. ಗಂಡಸು ಸಂಪಾದಿಸಬಹುದಾದ ನಿರ್ಜೀವ ಭೌತಿಕ ವಸ್ತುವಿನಲ್ಲಿ ಹೆಣ್ಣನ್ನು ಪ್ರಭುತ್ವ ಮತ್ತು ಧರ್ಮ ಸತ್ತೆಗಳು ನಿರ್ಲಜ್ವವಾಗಿ ಸೇರಿಸಿಕೊಂಡು ಬಂದಿರುವ ಬಗ್ಗೆ ಯಾವ ಸಮಾಜ ಸುಧಾರಕನ ಸಂಕಟಕ್ಕೆ ನಿಲುಕದ ಹಾಗೇ ಉಳಿದಿದೆ.             ಸರಕು ಸಂಸ್ಕೃತಿಯ ವಿಶೇಷತೆ ಮತ್ತು ಹಿತ ಅಡಗಿರುವುದು ಹೆಣ್ಣನ್ನು ಬಳಸಿಕೊಳ್ಳುವ ವಿಧಾನದಲ್ಲಿ . ಸಾಮಾಜಿಕವಾಗಿ ಹೆಣ್ಣನ್ನು ಬದುಕಿನುದ್ದಕ್ಕೂ ಅನ್ಯರ ಹಂಗಿನಲ್ಲಿರುವ ಬೆಲೆಯುಳ್ಳ ಪ್ರಾಣಿ, ವಸ್ತುವಾಗಿಸಿರುವ ಸಾಮಾಜಿಕ ಬದುಕಿನ ಸಂರಚನೆಯಲ್ಲಿಯೇ ಅಫೀಮಿನಂತಹ ಧರ್ಮ ಮತ್ತು ಹಿಂಸಾವಾದದ ಪ್ರಭುತ್ವದ ಕೌರ್ಯ ಗಟ್ಟಿಗೊಂಡಿದೆ. ಇದನ್ನು ಅರ್ಥಮಾಡಿಕೊಳ್ಳುವುದರ ಮೂಲಕ ಸ್ತ್ರೀಯ ಬದುಕಿನ ಸಂಕಥನವನ್ನು ಕಟ್ಟಿಕೊಳ್ಳಲು ಸಾಧ್ಯ. ಮಾರುಕಟ್ಟೆಯಲ್ಲಿ ಮಹಿಳೆ ಕಳೆದು ಹೋಗುತ್ತಿರುವ ಸಂಗತಿ ನಮಗೇನೂ ಹೊಸ ಸಂಗತಿಯಲ್ಲ. ನಮ್ಮ ಪುರಾಣ ಪುಣ್ಯ ಪುರುಷರ ಬೆನ್ನ ಹಿಂದೆ, ಕಣ್ಣ ಮುಂದೆ, ಕಾಲ ಕೆಳಗೆ, ಕಾಲ ಮೇಲೆ ಹೆಣ್ಣನ್ನು ಇಟ್ಟುಕೊಂಡು ದಮನಿಸಿದ ಸಂಗತಿಗಳು ನಮ್ಮ ಸಾಮಾಜಿಕ ಮೌಲ್ಯಗಳೆಂದು ಧರ್ಮ ಮುದ್ರೆಯ ಮೂಲಕ ನಿರಂತರ ಭಕ್ತಿಪೂರ್ವಕವಾಗಿ ಪಠಿಸುವ ಪರಿಪಾಠ ಇಂದಿಗೂ ನಿಂತಿಲ್ಲ.             ಮಹಾಭಾರತದಲ್ಲಿ ಧರ್ಮರಾಯ ಕೈ ಹಿಡಿದ ಹೆಂಡತಿ ದ್ರೌಪದಿಯನ್ನು ಹಿರಿಯರ ಸಮ್ಮುಖದಲ್ಲಿ ಜೂಜಿನಲ್ಲಿ ಪಣಕ್ಕಿಟ್ಟು ಸೋಲುವುದರ ಮೂಲಕ ಧರ್ಮವನ್ನು  ಎತ್ತಿ ಹಿಡಿದ ಕಥೆಯನ್ನು ರಸವತ್ತಾಗಿ ಹೇಳುವ ಮುಂದೆ ದ್ರೌಪದಿಯ ಅಸಹಾಯಕತೆ ನೆನಪಾಗುವುದೇ ಇಲ್ಲ. ಸಪ್ತಪದಿ ತುಳಿದು ಸುಖ-ದುಃಖದಲ್ಲಿ ಸಮವಾಗಿರೆಂದು ಕೈ ಹಿಡಿದು ಬಂದ ಹೆಂಡತಿಯನ್ನು ತುಂಬಿದ ಸಭೆಯಲ್ಲಿ ನಿಲ್ಲಿಸಿ ಪಾತಿವ್ರತ್ಯ ಪರೀಕ್ಷಿಸುವ ರಾಮ ಮಹಾತ್ಮನೆಂದು ಕರೆಯಿಸಿಕೊಂಡಿದ್ದರ ಹಿಂದೆ ಸೀತೆಯ ದಯನೀಯತೆ ಮರೆತು ಹೋಗುತ್ತದೆ. ಸತ್ಯಕ್ಕಾಗಿ ಹರಿಶ್ಚಂದ್ರ ಹೆಂಡತಿಯನ್ನು ಮಾರುವಾಗ ಚಂದ್ರಮತಿ ಅನುಭವಿಸಿದ ಸಂಕಟದ ಅರಿವು ಯಾರ ಹೃದಯಕ್ಕೂ ತಟ್ಟುವುದಿಲ್ಲ. ಯಯಾತಿ ಮಹಾರಾಜ ತನ್ನ ಸ್ತ್ರೀಯರಿಗೆ ಹೆಸರುಳಿಸಿಕೊಳ್ಳುವ ಸಲುವಾಗಿ ದಾನವಾಗಿ ಕುದುರೆ ಕೇಳಿದ ಗಾವಲನಿಗೆ ಹೊಟ್ಟೆಯಲ್ಲಿ ಹುಟ್ಟಿದ ಮಗಳು ಮಾಧವಿಯನ್ನು ದಾನವಾಗಿ ನೀಡಿದ್ದು ಉಳಿದಿರುವುದೇ ಹೊರತು ಮಾಧವಿಯ ಛಿದ್ರಗೊಂಡ ಕನಸುಗಳು ಮರೆತು ಹೋಗಿವೆ.  ಗುರುವಿಗೆ ದಕ್ಷಿಣೆ ಕೊಟ್ಟು ಗುರು ಭಕ್ತಿಯನ್ನು ಮರೆಯುವ ಸಲುವಾಗಿ ಗಾಲವ ರಾಜರಿಂದ ರಾಜರಿಗೆ ಮಾಧವಿಯನ್ನು ಹೆತ್ತು ಕೊಡುವ ಯಂತ್ರದಂತೆ ಮಾರಿ ಕುದುರೆ ಪಡೆಯುತ್ತ ಹೋದ ಸಂಗತಿ ನಮಗೆ ಮಾರಿದ ದಾಖಲೆ ಕಡತಗಳಲ್ಲಿ ಮಿಂಚುತ್ತಿದೆ. ಇಂದಿಗೂ ಗಂಡಸಿನ ಅಹಮ್ಮಿಗೆ ಪೆಟ್ಟು ಬೀಳುವುದೆಲ್ಲ ಆತನ ಒಡೆತನದಲ್ಲಿರುವ ಹೆಂಗಸರನ್ನು ಕುರಿತು ಮಾತನಾಡಿದಾಗ ಮಾತ್ರ.             ನಮ್ಮ ಸುತ್ತ ಮುತ್ತಲೂ ನಡೆಯುತ್ತಿರುವ ಘಟನೆಗಳಿಗೆ ಒಂದಿಲ್ಲಾ ಒಂದು ರೀತಿಯಲ್ಲಿ ಹೆಣ್ಣನ್ನು ತಳುಕು ಹಾಕಲಾಗಿರುತ್ತದೆ. ಹೆಣ್ಣನ್ನು ಮಾರುವ, ಕೊಳ್ಳುವ, ಪಣಕ್ಕಿಡುವ, ಕದ್ದು ಪರಾರಿಯಾಗುವ ವಿಷಯಗಳೆಲ್ಲ ಮಾರುಕಟ್ಟೆಯ ಸಂಸ್ಕೃತಿಯ ಇನ್ನೊಂದು ರೂಪ. ಅಷ್ಟೇ ಅಲ್ಲ ಹೆಣ್ಣನ್ನು ನಿರ್ಜೀವ  ವಸ್ತುವಾಗಿ ಸಂಭೋದಿಸುವುದನ್ನು ಕಾಣಬಹುದು. ಇಂದಿಗೂ ಅದು, ಇದು ಎಂದೇ  ಕರೆಯಲಾಗುತ್ತದೆ. ಅಷ್ಟೇ ಅಲ್ಲ ಎತ್ತು ಕತ್ತೆಗಳನ್ನು ಓಡಿಸಿಕೊಂಡು ಹೋದರು ಎನ್ನುವಂತೆ ಹೆಣ್ಣನ್ನು ಓಡಿಸಿಕೊಂಡು ಹೋಗಲಾಯಿತೆಂದು ಕರೆಯುವುದನ್ನೆಲ್ಲ ನೋಡಿದಾಗ ಹೆಣ್ಣಿನ ಇರುವಿಕೆಯನ್ನು ಸಾಂಸ್ಕೃತಿಕವಾಗಿ ಹೇಗಿದೆಯೆಂಬುದನ್ನು ಮತ್ತೇ ಮತ್ತೇ ವೇದಪುರಾಣಗಳನ್ನು ಉದಾಹರಣೆಗೆ ಬಳಸಬೇಕಾಗಿಲ್ಲ.             ಇಂದು ಜಾಗತೀಕರಣ, ಖಾಸಗೀಕರಣ, ಉದಾರೀಕರಣ ಕಾರಣಗಳಿಂದ ಅಭಿವೃದ್ಧಿ ಶೀಲ ದೇಶಗಳು ತಮ್ಮ ಬಹುಮುಖ ಅಸ್ತಿತ್ವವನ್ನು ಕಳೆದುಕೊಳ್ಳುವ ಅಪಾಯದಲ್ಲಿವೆ. ವ್ಯಾಪಾರಿ ಉದ್ದೇಶದಿಂದ ಬರುವ ವ್ಯಕ್ತಿ ಸಂಗತಿಗಳೆಲ್ಲ ಬರಿ ಲಾಭದ ಮೇಲೆ ಕಣ್ಣಿಟ್ಟಿರುತ್ತವೆ. ಲಾಭ ಗಳಿಕೆಗಾಗಿ ಜೀವ ವಿರೋಧಿ ತಂತ್ರಗಳನ್ನೆಲ್ಲ ಯಥೇಚ್ಛವಾಗಿಯೇ ಬಳಸುತ್ತೇವೆ. ಐವತ್ತು ವರ್ಷದ ಹಿಂದೆ ಭಾರತಕ್ಕೆ ಕಾಲಿಟ್ಟ ಬ್ರಿಟಿಷರ ಕೈಯಲ್ಲಿ ತಕ್ಕಡಿ ಉದಾಹರಣೆಗೆ ಮಾತ್ರವಿತ್ತೆಂಬುದನ್ನು  ನೆನಪಿಸಿಕೊಳ್ಳಬೇಕಾಗಿದೆ. ಇಂದು ಮತ್ತೆ ಅದೇ ಅಪಾಯದಲ್ಲಿ ದೇಶ ಸಿಲುಕುತ್ತಿದೆ. ವ್ಯಕ್ತಿ ಹಿತಾಸಕ್ತಿಯ ರಾಜಕಾರಣಕ್ಕೆ ಯಾವುದೇ ತಾತ್ವಿಕ ಬದ್ಧತೆಯಿಲ್ಲದೆ ಇರುವುದರಿಂದ ಏನೆಲ್ಲ ಆಪತ್ತುಗಳನ್ನು ಆಹ್ವಾನಿಸಿದ್ದೇವೆ. ವಿಶ್ವ ವಾಣಿಜ್ಯ ನೀತಿಗೆ ಒಪ್ಪಿಗೆ ನೀಡುವಾಗ ನಮ್ಮ ದೇಶದ ಆರ್ಥಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಅಸ್ತಿತ್ವಕ್ಕೆ ಧಕ್ಕೆ ಭವಿಷ್ಯತ್ತಿನಲ್ಲಿ ಬರಬಹುದೆಂಬ ಮುಂಜಾಗರೂಕತೆ, ಮುಂದಾಲೋಚನೆಗಳಿಲ್ಲದೆ ವಧಾಸ್ಥಾನಕ್ಕೆ ಬಂದು ನಿಂತಿರುವೆವು. ಬಹುರಾಷ್ಟ್ರೀಯ ಕಂಪನಿಗಳಿಗೆ ರತ್ನಗಂಬಳಿಯನ್ನು ಹಾಸಿ ನಡುಮನೆಗೆ ಕರೆದುಕೊಂಡಿದ್ದೇವೆ. ಹೀಗೆ ಬಂದವರಿಗೆ ನಮ್ಮ ಮನೆಯ ಹೆಂಗಸರಿಂದ ರಾಜೋಪಚಾರ ನೀಡಲು ಭ್ರಮೆ ಮತ್ತು ದುರಾಸೆಯ ಒತ್ತಡಗಳನ್ನು ಹೇರಿದ್ದೇವೆ.             ಈ ಜಾಗತೀಕರಣ ಪ್ರಕ್ರಿಯೆಯಿಂದ ಬಹುಸಂಖ್ಯಾತ ದುಡಿವ ವರ್ಗ ಮತ್ತು ಮಹಿಳೆಯರು ಅಗ್ಗದ ವಸ್ತುಗಳಾಗಿ ಬಳಕೆಗೊಳ್ಳುತ್ತಿರುವ ಶೋಚನೀಯ ವಾತಾವರಣ ದೇಶದುದ್ದಕ್ಕೂ ಕಾಣಿಸುತ್ತಿದೆ. ಧಾರ್ಮಿಕವಾಗಿಯೇ ಹೆಣ್ಣನ್ನು ಭೋಗಪ್ರದ ಜೀವವೆಂದು ಸಾರಿದ್ದಷ್ಟೇ ಅಲ್ಲ ಅದನ್ನು ಸಂಸ್ಕೃತಿಯಾಗಿಯೂ ಬೆಳಸಿಕೊಂಡು ಬರುತ್ತಿರುವೆವು. ಈ ಹಳೆಯ ಪುರಾಣ ಮೂಲದ ಸ್ತ್ರೀ ಮಾದರಿಗಳು ಇಂದು ಸಾಣೆ ಹಿಡಿಯಲ್ಲಿಟ್ಟು ಹೊಸ ರೂಪದಲ್ಲಿ ತಳಕು ಬಳುಕಿನಿಂದ ನಾವು ಕೊಳ್ಳುವ ವಸ್ತುಗಳಿಗೆ ಕಿರುನಗೆ ಬೀರಲು ನಿಂತಿರುವಳು. ಬಂಡವಾಳ ಹೂಡುವ ಬಹುರಾಷ್ಟ್ರೀಯ ಕಂಪನಿಗಳು ಮತ್ತು ಸ್ವದೇಶಿ ಬಂಡವಾಳ ಶಾಹಿಗಳು ರಾಷ್ಟ್ರದ ಆರ್ಥಿಕ ಸ್ವಾಯತ್ತತೆ, ಸಾವಲಂಬನೆಯ ನೆಲೆಗಳನ್ನು ಕ್ರಮೇಣ ನಿಷ್ಕ್ರಿಯಗೊಳಿಸುತ್ತಿವೆ. ಇದಕ್ಕಾಗಿ ರಾಜಕೀಯ ಅರಾಜಕತೆಯನ್ನು ಹುಟ್ಟು ಹಾಕುತ್ತದೆ. ಪ್ರಜ್ಞಾವಂತರ ಗಮನ ತನ್ನ ಮೇಲೆ ಬೀಳದಿರುವಂತೆ ಮತೀಯ ಭಯೋತ್ಪಾದಕತೆಯನ್ನು ಪ್ರಚೋದಿಸುತ್ತದೆ. ಜನ ಸಾಮಾನ್ಯರನ್ನೊಳಗೊಂಡ ಹಾಗೇ ಇಡೀ ಜನ ಸಮುದಾಯಗಳಲ್ಲಿ ಪರಸ್ಪರ ಸಂದೇಹ, ಅಪನಂಬುಗೆಯನ್ನುಂಟು ಮಾಡಿ ಆಂತರಿಕ ನೆಮ್ಮದಿಯನ್ನು ಕಿತ್ತುಕೊಳ್ಳತ್ತದೆ. ಇದಕ್ಕೆಲ್ಲ ಸ್ತ್ರೀಯನ್ನು ಒಂದಲ್ಲಾ ಒಂದು ರೀತಿಯಲ್ಲಿ ತಳುಕು ಹಾಕಿರುತ್ತದೆ.             ಇಲ್ಲಿಯ ಭೌದ್ಧಿಕ ಮತ್ತು ಭೌತಿಕ ಸಂಪತ್ತಿನ ಮೇಲೆ ಆಕ್ರಮಣಕಾರಿ ನೀತಿಯನ್ನು ಹೇರುತ್ತದೆ. ಮಹಿಳೆಯರಲ್ಲಿ ಉಪಭೋಗಪ್ರದವಾದ ಮನೋವೃತ್ತಿಯನ್ನು ಉದ್ದೀಪಿಸುತ್ತದೆ. ದುಡಿಯುವ ವರ್ಗದ ದುಡಿಯುವ ಅವಕಾಶಗಳನ್ನು ಯಂತ್ರಗಳ ಬಾಯಿಗೆ ಒಡ್ಡುತ್ತದೆ. ಹೀಗೆ ಆರ್ಥಿಕ ಅಸಹಾಯಕತೆಯಿಂದ ಬಳಲುವ ಜನವರ್ಗ ವ್ಯಾಪಾರಿ ತಂತ್ರಗಳಿಗೆ ಹೊಸ ಹೊಸ ರೂಪದಲ್ಲಿ ಬಲಿಯಾಗುತ್ತದೆ.             ಮುಂದುವರೆದ ದೇಶಗಳು ಉತ್ಪಾದಿಸುತ್ತಿರುವ ಕಾಂಡೋಂನಿಂದ ಹಿಡಿದು ಮಕ್ಕಳು ತಿನ್ನುವ ಚಾಕೋಲೇಟ್‌ನವರೆಗೂ ನಮ್ಮ ದೇಶದಲ್ಲಿ ಮಾರುಕಟ್ಟೆ ಕಳೆದುಕೊಂಡಿರುವ ಕಾರಣಕ್ಕಾಗಿ ಜಾಗತಿಕ ಮಾರುಕಟ್ಟೆಯನ್ನು ಮುಕ್ತವಾಗಿಟ್ಟಿದೆ. ಎಲ್ಲ ರೀತಿಯಿಂದಲೂ ಹಸಿದು ಕುಳಿತಿರುವ ಹಿಂದುಳಿದ ದೇಶಗಳು ದಿಢೀರನೆ ಈ ವ್ಯಾಪಾರಿ ಜಾಲಕ್ಕೆ ಬಿದ್ದು ದೇಶೀಯ ಸಾರ್ವಜನಿಕ ಉದ್ಯಮ ವ್ಯವಹಾರಗಳೆಲ್ಲ ಕುಸಿದು ಹೋಗಿವೆ. ಸರಕಾರಿ, ಸಾರ್ವಜನಿಕ ಉದ್ಯಮಗಳು ಕೃತಕ ನಷ್ಟದ ಕಾರಣಕ್ಕಾಗಿ ಶಾಶ್ವತವಾಗಿ ಬೀಗ ಜಡಿದು ಖಾಸಗಿಯವರ ಕೈಯಲ್ಲಿ ಬೀಗ ನೀಡುತ್ತಿರುವೆವು. ಇದರಿಂದ ಮಾರುಕಟ್ಟೆಯ ನೀತಿ ಹೇಗೆ ರೂಪಿಸಲ್ಪ ಡುತ್ತಿದೆಯೆಂದರೆ ‘ಅಕ್ಕನನ್ನು ತೆಗೆದುಕೊಂಡರೆ ತಂಗಿ ಫ್ರೀ’ ಎಂದು ರಸ್ತೆ ಬದಿಯಲ್ಲಿ ನಿಂತು ಕೂಗಿ ಕೂಗಿ ಕರೆಯುವಂತಾಗಿದೆ.             ಹೀಗೆ ಗ್ರಾಹಕನಲ್ಲಿ ಅಗ್ಗದರ ಮತ್ತು ಫ್ರೀ ಎನ್ನವುದರ ಆಮಿಷ ತೋರಿಸಿ ತನ್ನ ಉತ್ಪಾದನಾ ವಸ್ತುಗಳನ್ನು ಬಳಸುವಂತೆ ಮಾನಸಿಕ ರೋಗಕ್ಕೆ ಒಳಪಡಿಸಿದರೆ ಮುಗಿದೇ ಹೋಯಿತು. ಮಾನಸಿಕವಾಗಿ ಗುಲಾಮನಾದ ಗ್ರಾಹಕನನ್ನು ನಿರಂತರ ಶೋಷಿಸುವ ವಿಧಾನ ಬಂಡವಾಳಿಗರಿಗೆ ಚೆನ್ನಾಗಿ ತಿಳಿದಿರುತ್ತದೆ. ಹೀಗೆ ತಾನು ಉತ್ಪಾದಿಸಿದ ವಸ್ತುವಿಗೆ ಗ್ರಾಹಕನ ಮನೆಯ ಬಾಗಿಲನ್ನು ತಟ್ಟಲು ಅಗ್ಗದ ಕೂಲಿಯಲ್ಲಿ ಮಹಿಳೆಯರನ್ನು ದುಡಿಸಿಕೊಳ್ಳಲಾಗುತ್ತಿದೆ. ಏಕ ಕಾಲದಲ್ಲಿ ನಮ್ಮ ಮಹಿಳೆಯರು ಮತ್ತು ನಮ್ಮ ಗಂಡಸರ ಜೇಬಿನ ಭಾರ ಹಗುರವಾಗುವುದು. ಹೆಣ್ಣಿನ ಸೌಂದರ್ಯ ಬಹುಕಾಲದಿಂದ ಬಲಿಷ್ಠ ಗಂಡಸಿನ ಉಪಭೋಗಕ್ಕಾಗಿ ವೃದ್ಧಿಯಾಗುತ್ತಿತ್ತು. ಅದಕ್ಕಾಗಿಯೇ ಒಂದು ವರ್ಗದ ಹೆಣ್ಣನ್ನು ಸಿದ್ಧಗೊಳಿಸಲಾಗುತ್ತಿತ್ತು. ಇಂದು ಸಹ ವಿಶ್ವ ಮಾರುಕಟ್ಟೆಯಲ್ಲಿ ಒಂದು ವಸ್ತುವಿನ ಅಸ್ತಿತ್ವವನ್ನು ಸ್ಥಾಪಿಸಬೇಕಾದರೆ ಹೆಣ್ಣಿನ ಸೌಂದರ್ಯ ದೇಹವೊಂದು ಮುಖ್ಯ ಪಾತ್ರವಹಿಸುತ್ತದೆ. ಈ ಶತಮಾನದ ಅಂತ್ಯದಲ್ಲಿ ವಿಶ್ವ ಸುಂದರಿಯರ ಸ್ಪರ್ಧೆ ಗಲ್ಲಿ-ಗಲ್ಲಿಗಳಲ್ಲಿ ನಡೆಯುತ್ತಿದೆ. ಬಹು ಜನಪ್ರಿಯತೆಯನ್ನು ಗಳಿಸಿಕೊಂಡಿರುವ ವಿಶ್ವ ಸುಂದರಿ ಸ್ಪರ್ಧೆಯ ಹಿಂದೆ ಬಂಡವಾಳ ಶಾಹಿಗಳ ಕೈಗಳಿವೆ. ಸಾವಿರಾರು ವರ್ಷಗಳಿಂದ ಪುರಾಣಗಳ ಮೂಲಕ ನಮ್ಮ ನೆತ್ತಿಯ ಮೇಲೆ ಕುಣಿಯುತ್ತಿದ್ದ ಮೇನಕೆ, ತಿಲೋತ್ತಮೆ, ಊರ್ವಶಿಯರು ಪಾಯಿಖಾನೆಗಳನ್ನು ಬಿಡದೆ ಹಾಗೆ ಎಲ್ಲೆಂದರಲ್ಲಿ ತಳವೂರಿರುವರು. ಇಷ್ಟು ಶತಮಾನಗಳಲ್ಲಿ ಹುಟ್ಟಿದ ಸುಂದರಿಯರು ದಿಢೀರನೆ ಈ ಶತಮಾನದ ಅಂಚಿನಲ್ಲಿ ನಮ್ಮಂತಹ ದೇಶದಲ್ಲಿ ದಿಢೀರನೆ ಕಾಣಿಸಿಕೊಂಡಿರುವುದರ ಬಗ್ಗೆ ಅಶ್ಚರ್ಯಪಡುವುದೇನೂ ಇಲ್ಲ.             ಬೆಂಗಳೂರಿನಂತಹ ನಗರಗಳಲ್ಲಿ ಮಧ್ಯಮ ವರ್ಗದ ಜನ ಸಂಪತ್ತಿನ ಗಳಿಕೆಗಾಗಿ ಮನೆಯ ಮಕ್ಕಳನ್ನು ಅನಾರೋಗ್ಯದ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿರುವರು. ಸ್ಥಳೀಯ ವಸ್ತುವನ್ನು ಒಳಗೊಂಡ ಹಾಗೇ ವಿದೇಶ ಉತ್ಪಾದಿತ ವಸ್ತುಗಳಿಗೆ ಮಹಿಳೆಯರನ್ನು ರೂಪದರ್ಶಿಯರನ್ನಾಗಿ ಬಳಸಿಕೊಳ್ಳುವುದನ್ನು ಹೆಮ್ಮೆಯ ಸಂಗತಿ ಎಂದು ಕಾಣುತ್ತಿರುವೆವು.             ಜಾಹೀರಾತುಗಳಿಗೂ ವಸ್ತುಗಳಿಗೂ ಕಾರ್ಯಕಾರಣ ಸಂಬಂಧ ಏನೆಂಬುದನ್ನು ಕಾಣುತ್ತಿಲ್ಲ. ಮನೋ ವಿಕಾರಕ್ಕೆ ಆಸ್ಪದ ನೀಡುವ, ಸಾಮಾಜಿಕ ಸ್ವಾಸ್ಥ್ಯ ಕೆಡಿಸಬಹುದಾದ ಜಾಹೀರಾತುಗಳ ಮೇಲೆ ಕನಿಷ್ಠ ಪ್ರಮಾಣದ ನಿಯಂತ್ರಣ ಸಮಾಜ ಮತ್ತು ಸರಕಾರಕ್ಕಿಲ್ಲದಾಗಿದೆ. ದುಡಿಯುವ ವರ್ಗದ ಬದುಕಿನ ಸಂದೇಶದ ಮೇಲೆ ಜಾಹಿರಾತುಗಳು ದಾಳಿಗಿಳಿದಿವೆ. ನಮ್ಮ ದೇಶೀ ಪಾರಂಪರಿಕ ನಂಬಿಕೆ ಮತ್ತು ಸಂಸ್ಕೃತಿಯನ್ನು ಕ್ರಮೇಣ ವಿನಾಶಗೊಳಿಸುವ ಎಲ್ಲ ಹುನ್ನಾರಗಳು ಈ ಜಾಹಿರಾತುಗಳ ಮೂಲಕ ನಮ್ಮ ಮನೆ ಮನೆಯ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತಿರುವುದರ ಕಡೆ ನಮ್ಮ ಗಮನ ಕೇಂದ್ರಿಕರಿಸಬೇಕಾಗಿದೆ. ಉದಾಹರಣೆಗೆ: ನಮ್ಮ ಕೌಟುಂಬಿಕ ಬದುಕಿನ ಸೌಹಾರ್ದ ಸಂಬಂಧದ ಪ್ರತೀಕವಾಗಿದ್ದ ಮನೆಗೆ ಬಂದವರ ಬಾಯಾರಿಕೆ ನೀರು ಕೊಡುವ ಸ್ಥಾನದಲ್ಲಿ ಚಹಾ, ಕಾಫಿಗಳು ಹಲವು ವರ್ಷಗಳ ಅಧಿಪತ್ಯ ಸ್ಥಾಪಿಸಿದ್ದವು. ಇಂದು ಅದರ ಸ್ಥಾನದಲ್ಲಿ ಕೊಕೋ ಕೋಲಾ, ಪೆಪ್ಸಿ, ಸೆವೆನ್ ಅಫ್, ಲಿಮ್ಕಾ ಮಿಂಚುತ್ತಿವೆ. ಅದು ಹೇಗೆಂದರೆ ನಮ್ಮ ರೂಪದರ್ಶಿಯರನ್ನು ಜನಪ್ರಿಯ ನಟ-ನಟಿಯರನ್ನು ಬಳಸಿಕೊಂಡು ಮಾಡುತ್ತಿರುವ ಜಾಹಿರಾತು ಇಡೀ ನಮ್ಮ ಕೃಷಿ ಸಂಸ್ಕೃತಿಯನ್ನೆ ನಾಶ ಮಾಡುವಂತಿದೆ. ಹೊಲಕ್ಕೆ ಹೋಗಿ ಬಾಯಾರಿದೆ ಎಂದು ಯಾರಾದರೂ ಕೇಳಿದರೆ ಬಾವಿಯ ನೀರನ್ನು ಸೇದಿ ಬಾಯಾರಿಕೆಯನ್ನು ನೀಗುವ ನಮ್ಮ ಮಾನವ ಸಹಜತೆಯೇ ಮರೆಯಾಗಿ ಅದರ ಸ್ಥಾನದಲ್ಲಿ ಒಬ್ಬ ನಟನು ರೈತರ ವೇಷದಲ್ಲಿ ಬಂದು ಬಾವಿಯಿಂದ ಸೇದಿ ನೀರು ಕೇಳಿದ ಬೆಡಗಿಯರಿಗೆ ನೀಡುವುದೇನೆಂದರೆ ಪೆಪ್ಸಿ, ಕೊಕೋ ಕೋಲಾದ ಬಾಟಲಿಗಳನ್ನು. ಅಷ್ಟೇ ಅಲ್ಲ ಆ ಬೆಡಗಿಯರು ಅದನ್ನು ಕುಡಿದು ಆತನಿಗೆ ಮುತ್ತಿಕ್ಕಿ ಮೂರ್ಛೆ ಗೊಳಿಸುವುದು. ಇದು ಏಕಕಾಲದಲ್ಲಿ ನಮ್ಮ ನೆಲದ ಸಂಸ್ಕೃತಿಯನ್ನು ನಮ್ಮ ಮನೆಯ ಹೆಣ್ಣು ಮಕ್ಕಳನ್ನು ಮುಂದಿಟ್ಟೆ ಮಾಡುವುದು. ಹೀಗೆ ಮಾರುಕಟ್ಟೆಯ ಸಂಸ್ಕೃತಿ ತಮ್ಮ ಪಾರಂಪರಿಕ ನಂಬಿಕೆ, ನಡತೆ, ವಿಚಾರಗಳನ್ನು ಕ್ರಮೇಣ ನಾಶಗೊಳಿಸುವುದು. ಇಂತಹದ್ದನ್ನು ದಿನ-ದಿನವು ನೋಡುವ ಮಕ್ಕಳು ಬಾವಿಯಲ್ಲಿ ತೆಂಗಿನ ಕಾಯಿಗಳಲ್ಲಿ ಬಾಯಾರಿಕೆಗೆ ನೀರಿರುವುದು ಎಂಬುದನ್ನು ಮರೆತು ಬಾಯಾರಿಕೆ ಎಂದರೆ ಕೊಕೋ ಕೋಲಾ, ಪೆಪ್ಸಿ, ಸೆವೆನ್ ಅಪ್ ಎಂದು ಭಾವಿಸುವ ಅಪಾಯಗಳು ನಮ್ಮೆದುರಿಗಿದೆ ನಮ್ಮ ಸಾಮಾಜಿಕ ಪಿಡುಗಾದ ವರದಕ್ಷಿಣೆ, ವರೋಪಚಾರಗಳ ಬಗ್ಗೆ ಕಾನೂನು ಬದ್ಧವಾಗಿ ತಡೆಯುವ ಕ್ರಮವನ್ನು ಬಿಗಿಗೊಳಿಸುವಷ್ಟರಲ್ಲಿಯೇ ಅದು ನುಣುಚಿಕೊಂಡು ಹೊಸ ರೂಪದಲ್ಲಿ ಯುವ ಜನತೆಯ ಮನಸ್ಸಿನಲ್ಲಿ ಬೇರೂರಿದೆ. ಸಾಂಪ್ರದಾಯಿಕವಾಗಿ ಮದುವೆಯಲ್ಲಿ ಸ್ಥಿತಿವಂತರು ವರನನ್ನು ಎದುರುಗೊಳ್ಳಲು, ಬೀಳ್ಕೊಡಲು ಕುದುರೆ, ಎತ್ತಿನಬಂಡಿ, ಟಾಂಗಾ, ತೆರೆದ ಜೀಪುಗಳನ್ನು ಬಳಸಿ ತಮ್ಮ ಸಂತೋಷ, ಸಂಭ್ರಮ ಯೋಗ್ಯತೆ, ಅಂತಸ್ತುಗಳನ್ನು ಪ್ರದರ್ಶಿಸುತ್ತಿದ್ದರು. ಇಂದು ಕುದುರೆಗಾಡಿ, ಎತ್ತಿನ ಬಂಡಿಯ ಸ್ಥಾನದಲ್ಲಿ ಹೀರೋ

ಸಂತೆಯಲ್ಲಿ ನಿಂತ ಅವಳು Read Post »

You cannot copy content of this page

Scroll to Top