ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ವಿಲ್ಸನ್ ಕಟೀಲ್ ವಿಲ್ಸನ್ ಕಟೀಲ್ ಕಾವ್ಯನಾಮದಿಂದ ಬರೆಯುವ ವಿಲ್ಸನ್ ರೋಶನ್ ಸಿಕ್ವೇರಾ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಟೀಲಿನವರು. ಹುಟ್ಟಿದ ದಿನಾಂಕ – 31.08.1980. ತಂದೆಯ ಹೆಸರು ಗ್ರೆಗರಿ ಸಿಕ್ವೇರಾ, ತಾಯಿ ಬೆನೆಡಿಕ್ಟ ಸಿಕ್ವೇರಾ. ಕಾರಣಾಂತರಗಳಿಂದ ಇಂಜಿನಿಯರಿಂಗ್ ವ್ಯಾಸಂಗವನ್ನು ತ್ಯಜಿಸಿ ಸಾಹಿತ್ಯದತ್ತ ಆಕರ್ಷಣೆ. ತಮಿಳು ಹಾಡುಗಳಿಂದ ಸ್ಪೂರ್ಥಿಗೊಂಡು ಕಾವ್ಯದತ್ತ ಒಲವು. ತನ್ನ ತಾಯಿಭಾಷೆ ಕೊಂಕಣಿಯಲ್ಲಿ ಕತೆ, ಕವಿತೆ, ಗೀತೆ ಹಾಗೂ ಇನ್ನಿತರ ಸಾಹಿತ್ಯ ಕೃಷಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೊಂಕಣಿಯಲ್ಲಿ ಇದುವರೆಗೆ ’ದೀಕ್ ಆನಿ ಪೀಕ್’’, ’ಪಾವ್ಳೆ’, ’ಎನ್‍ಕೌಂಟರ್’ ಕವನ ಸಂಕಲನಗಳು ಪ್ರಕಟವಾಗಿವೆ. ದೂರದರ್ಶನ, ಆಕಾಶವಾಣಿ. ದಸರಾ ಕವಿಗೋಶ್ಟಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಕವಿಗೋಷ್ಟಿಗಳಲ್ಲಿ ಭಾಗವಹಿಸಿದ್ದಾರೆ. ಮೂರು ಬಾರಿ ಅತ್ಯುತ್ತಮ ಗೀತರಚನೆಗಾಗಿ, ಮಾಂಡ್ ಸೊಭಾಣ್ ಸಂಸ್ಥೆ ಕೊಡಮಾಡುವ ಜಾಗತಿಕ ಸಂಗೀತ ಪುರಸ್ಕಾರಕ್ಕೆ ಭಾಜನರಾಗಿದ್ಡಾರೆ. ಇವರಿಗೆ ’ಕಿಟಾಳ್ ಯುವ ಪುರಸ್ಕಾರ’ವೂ  ಪ್ರಾಪ್ತಿಯಾಗಿದೆ. “ಎನ್ ಕೌಂಟರ್” ಕವನ ಸಂಕಲನಕ್ಕೆ 2017 ರ ಪ್ರತಿಷ್ಠಿತ ವಿಮಲಾ ವಿ ಪೈ ಕಾವ್ಯ ಪುರಸ್ಕಾರ ಪ್ರಾಪ್ತಿಯಾಗಿದೆ. ಕನ್ನಡದಲ್ಲೂ ಅಪರೂಪಕ್ಕೆ ಬರೆಯುತ್ತಿದ್ದ ಇವರ ಕವಿತೆಗಳು, ಪಂಜು ಅಂತರ್ಜಾಲ ಪತ್ರಿಕೆ, ಗೌರಿ ಲಂಕೇಶ್, ಹೊಸತು, ಸುಧಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಗಿರೀಶ್ ಹಂದಲಗೆರೆ ಸಂಪಾದಕತ್ವದ ಅರಿವೇ ಅಂಬೇಡ್ಕರ್, ಕಾವ್ಯಮನೆ ಪ್ರಕಾಶನದ ಕಾವ್ಯಕದಳಿ ಸಂಕಲನಗಳಲ್ಲಿ ಇವರ ಕವಿತೆಗಳು ಸೇರಿವೆ. ಕೈದಿಗಳ ಒಳಿತಿಗಾಗಿ ಶ್ರಮಿಸುವ PRISON MINISTRY OF INDIA ಪುರವಣಿಯಲ್ಲಿ ಇವರ ಕವಿತೆ ಪ್ರಕಟಗೊಂಡಿದೆ. ಟಿ.ಎಸ್. ಗೊರವರ್ ಸಂಪಾದಕತ್ವದ ’ಸಂಗಾತ’ ಪತ್ರಿಕೆಯ ಮೊದಲ ಸಂಚಿಕೆಯಲ್ಲಿ ಇವರ ಕವಿತೆಗಳು ಪ್ರಕಟಗೊಂಡು ಕಾವ್ಯಾಸಕ್ತರ ಗಮನ ಸೆಳೆದವು. ನಂತರ ’ಸಂಗಾತ ಪತ್ರಿಕೆ’ ಪ್ರಕಾಶನದಿಂದಲೇ ಇವರ ಮೊದಲ ಸಂಕಲನ ’ನಿಷೇಧಕ್ಕೊಳಪಟ್ಟ ಒಂದು ನೋಟು’ ಪ್ರಕಟಗೊಂಡಿತು. ಈ ಸಂಕಲನಕ್ಕೆ ಆರಿಫ್ ರಾಜಾ ಇವರ ಮುನ್ನುಡಿಯಿದೆ. ಈ ಸಂಕಲನಕ್ಕೆ ’ಯುವಕವಿಗಳ ಪ್ರಥಮ ಸಂಕಲನ’ ವಿಭಾಗದ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದೆ. ಪ್ರಸ್ತುತ “ಆರ್ಸೊ’ ಕೊಂಕಣಿ ಮಾಸಿಕ ಪತ್ರಿಕೆಯ ಸಂಪಾದಕ ಹಾಗೂ ’ಕಿಟಾಳ್’ ಸಾಹಿತ್ಯ ಜಾಲತಾಣದ ಉಪ ಸಂಪಾದಕಾರಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ, ಪತ್ನಿ ಪ್ರಿಯಾ ಹಾಗೂ ಇಬ್ಬರು ಮಕ್ಕಳೊಂದಿಗೆ ಕಟೀಲಿನಲ್ಲಿ ವಾಸ. ಸಾಹಿತ್ಯವಲ್ಲದೆ ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಅವರ ಎರಡು ಕೊಂಕಣಿ ಕವಿತೆಗಳು ನಿಮ್ಮ ಓದಿಗಾಗಿ. ಕೊಂಕಣಿ, ಕನ್ನಡ ಎರಡೂ ಭಾಷೆಯಲ್ಲಿ ವಿಲ್ಸನ್ ಕಟೀಲ್ ಅವರೇ ಬರೆದಿದ್ದಾರೆ. ಸಾಂತ್ ಭುರ್ಗ್ಯಾನ್ ಎದೊಳ್ ಚ್ ಬೊಂಬ್ಯಾಕ್ ಪೊಟ್ಲುನ್ ಧರುನ್ ಏಕ್ ದೋನ್ ಉಮೆಯ್ ದೀವ್ನ್ ಜಾಲ್ಯಾತ್… ಪುಣ್ ವ್ಹಡಾಂಚಿ ವಾರ್ಜಿಕ್ ಆಜೂನ್ ಸಂಪೊಂಕ್ ನಾ! ** ಉಮ್ಕಳ್ಚಿಂ ವಸ್ತುರಾಂ ವಿಂಚ್ತೇ ಆಸಾತ್- ಆಪಾಪ್ಲ್ಯಾ ರಂಗ್ ಜೋಕ್ ಗಿರೇಸ್ತ್ ಕಾಯೆಕ್ ಜೊಕ್ತ್ಯಾ ಕುಡಿಂಕ್! ** ನವ್ಯೊ ವ್ಹಾಣೊ ಕಟೀಣ್ ತೊಪ್ತಾತ್… ದುಬ್ಳ್ಯಾ ವ್ಯಾರಾಗಾರಾನ್ ಮಾತ್ಯಾರ್ ಘೆವ್ನ್ ಗಾಂವಾನ್ ಗಾಂವ್ ಭೊಂವ್ಡಾಯಿಲ್ಲ್ಯಾ ತಾಂಕಾಂ ಥೊಡೊ ವೇಳ್ ಲಾಗ್ತಾ- ಗಿರಾಯ್ಕಾಚ್ಯಾ ಪಾಂಯಾಂಕ್ ಹೊಂದೊಂಕ್! * ಪಾತ್ಳಾಯ್ಲ್ಯಾಂತ್ ಆಯ್ದಾನಾಂ.. ಪುಣ್ ಥೊಡ್ಯಾಂಕ್ ಮಾತ್ರ್ ತಿಚ್ಯೆ ಬುತಿಯೆಚೆರ್ ಚ್ ದೊಳೊ! * ಕೊಣಾಚ್ಯಾಗೀ ಹಾತಾ-ಗಿಟಾಚೆರ್ ಆಪ್ಲೊ ಫುಡಾರ್ ಸೊಧ್ತಾತ್ ಭವಿಶ್ಯ್ ಸಾಂಗ್ಚೆ! * ಭಾಜ್ ಲ್ಲೆ ಚಣೆಂ ಗುಟ್ಲಾಯಿಲ್ಲ್ಯಾ ಕಾಗ್ದಾಂನಿ ಪರತ್ ಉಬೆಲ್ಯಾತ್ ಪರ್ನ್ಯೊ ಖಬ್ರೊ! * ಹಾತ್ ಒಡ್ಡಾಯ್ಲಾ ಭಿಕಾರ್ಯಾನ್… ಹರ್ದೆಂ ಉಸವ್ನ್ ಪಡ್ಲ್ಯಾತ್ ವಿಕುನ್ ವಚನಾತ್ ಲ್ಲಿಂ ರಿತಿಂ ಪರ್ಸಾಂ! **************** ಸಂತೆಯ ಬಿಡಿ ಚಿತ್ರಗಳು * ಮಗು ಈಗಾಗಲೇ ಗೊಂಬೆಯನ್ನು ಎದೆಗಪ್ಪಿ ಒಂದೆರಡು ಮುತ್ತುಗಳನ್ನೂ ಕೊಟ್ಟಾಗಿದೆ… ದೊಡ್ಡವರ ಚಿಲ್ಲರೆ ಚೌಕಾಸಿಯಿನ್ನೂ ಮುಗಿದಿಲ್ಲ! * ಜೋಡಿಸಿಟ್ಟ ಬಟ್ಟೆಗಳು ಹುಡುಕುತ್ತಿವೆ- ತಂತಮ್ಮ ಬಣ್ಣ, ಅಳತೆ, ಶ್ರೀಮಂತಿಕೆಗೆ ತಕ್ಕ ದೇಹಗಳನ್ನು! * ಹೊಸ ಚಪ್ಪಲಿಗಳು ವಿಪರೀತ ಚುಚ್ಚುತ್ತಿವೆ… ಬಡ ವ್ಯಾಪಾರಿ ತಲೆಮೇಲೆ ಹೊತ್ತು  ಊರೂರು ಸುತ್ತಿದ ಅವುಗಳಿಗೆ ಕೆಲಕಾಲ ಹಿಡಿಯುತ್ತೆ… ಗಿರಾಕಿಯ ಪಾದಗಳಿಗೆ ಹೊಂದಿಕೊಳ್ಳಲು! * ಹರಡಿಕೊಂಡಿವೆ ಪಾತ್ರೆಗಳು… ಕೆಲವರಿಗಂತೂ ಅವಳ ಬುತ್ತಿಯ ಮೇಲೆಯೇ ಕಣ್ಣು! * ಯಾರದೋ ಕೈರೇಖೆಗಳಲ್ಲಿ ತಮ್ಮ ಬದುಕು ಹುಡುಕುತ್ತಿದ್ದಾರೆ ಭವಿಷ್ಯ ಹೇಳುವವರು! * ಹುರಿದ ಕಡಲೆ ಕಟ್ಟಿದ ಪತ್ರದಲ್ಲಿ ಮತ್ತೆ ಬೆಚ್ಚಗಾಗಿವೆ ಹಳೆಯ ಸುದ್ದಿಗಳು! * ಕೈಚಾಚಿದ್ದಾನೆ ಭಿಕ್ಷುಕ… ಎದೆತೆರೆದು ಬಿದ್ದುಕೊಂಡಿವೆ ಮಾರಿ ಹೋಗದ ಖಾಲಿ ಪರ್ಸುಗಳು! ** ಪತ್ರ್ ಕೊಯ್ತೆಚೆ ವೋಂಟ್ ಪುಸ್‌ಲ್ಲೆಂ ಕಾಗತ್ ಭಾಯ್ರ್ ಉಡಯ್ತಚ್ ಸುಟಿ ಕೆಲ್ಲ್ಯೆ ಮಾಸ್ಳೆಚ್ಯೆ ಹಿಮ್ಸಣೆಕ್ ಸೆಜ್ರಾಮಾಜ್ರಾಂಮದೆಂ ಝುಜ್! ಪಳೆವ್ನ್ ಬೊಟಾಂ ವಾಡನಾತ್ಲ್ಯಾ ಪೊರಾಂಕ್‌ಯೀ ತಲ್ವಾರ್ ಧರ‍್ಚೆಂ ಧಯ್ರ್! ಚಿಮ್ಣೆಚಿ ಜೀಬ್ ಲಾಗಯಿಲ್ಲೆಂ ಕಾಗತ್ ರಾಂದ್ಣಿಕ್ ಪಾವಯ್ತಚ್ ಸುಕ್ಯಾ ಲಾಂಕ್ಡಾಂಕ್ ಭಗ್ಗ್ ಕರ‍್ನ್ ಧರ‍್ಚೊ ಉಜೊ! ಪಳೆವ್ನ್ ಆಂಗ್ ನಿಂವ್‌ಲ್ಲ್ಯಾ ಮ್ಹಾತಾರ‍್ಯಾಂಕ್‌ಯೀ ಧಗ್ ಘೆಂವ್ಚಿ ವೊಡ್ಣಿ! ಮ್ಹಜ್ಯಾ ಗಾಂವಾಂತ್ ಪತ್ರ್ ಕೊಣೀ ವಾಚಿನಾಂತ್ ಫಕತ್ ವಾಪಾರುನ್ ಉಡಯ್ತಾತ್! ******** ಪತ್ರಿಕೆ ಕತ್ತಿಯ ತುಟಿ ಒರೆಸಿದ ಕಾಗದ ಹೊರಕ್ಕೆಸೆದಾಗ ಕತ್ತರಿಸಿದ ಮೀನಿನ ವಾಸನೆಗೆ ನೆರೆಕರೆಯ ಬೆಕ್ಕುಗಳ ಮಧ್ಯೆ ಮಹಾ ಯುದ್ಧ! ನೋಡುತ್ತಿದ್ದಂತೆಯೇ – ಬೆರಳು ಮೊಳೆಯದ ಪೋರರಿಗೂ ತಲವಾರು ಹಿಡಿಯುವ ಧೈರ್ಯ! ಚಿಮಣಿಯ ನಾಲಗೆ ಸ್ಪರ್ಷಿಸಿದ ಕಾಗದ ಒಲೆಯ ಒಳ ಹೊಕ್ಕಾಗ ಒಣ ಕಟ್ಟಿಗೆಗೆ ಭಗ್ಗನೆ ಹತ್ತಿಕೊಳ್ಳುವ ಜ್ವಾಲೆ! ನೋಡುತ್ತಿದ್ದಂತೆಯೇ ಕಾವು ಆರಿದ ಮುದುಕರಿಗೂ ಬೆಂಕಿ ನೆಕ್ಕುವ ಹುಚ್ಚು! ನನ್ನ ಊರಿನಲ್ಲಿ ಪತ್ರಿಕೆಯನ್ನು ಯಾರೂ ಓದುವುದಿಲ್ಲ…. ಬಳಸಿ ಎಸೆಯುತ್ತಾರೆ ಅಷ್ಟೆ! ************************************************* ಶೀಲಾ ಭಂಡಾರ್ಕರ್

ಕೊಂಕಣಿ ಕವಿ ಪರಿಚಯ Read Post »

ಇತರೆ

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ ‘ಸಂಗಾತಿ’ಯ ಮೂರನೇ ಆಯಾಮ ಅಂಕಣಬರೆಯುತ್ತಿರುವ ಶ್ರೀದೇವಿ ಕೆರೆಮನೆಯವರಿಗೆ ಶ್ರೀ ವಿಜಯ ಪ್ರಶಸ್ತಿ ದೊರಕಿದ್ದು ಪತ್ರಿಕೆಅವರನ್ನು ಅಭಿನಂದಿಸುತ್ತದೆ ಶ್ರೀದೇವಿ ಕೆರೆಮನೆಗೆ ಶ್ರೀವಿಜಯ ಪ್ರಶಸ್ತಿ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ನಾಡಿನ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ‌ ಶ್ರೀ ವಿಜಯ ಪ್ರಶಸ್ತಿಗೆ ಜಿಲ್ಲೆಯ ಕವಿಯತ್ರಿ, ಕಥೆಗಾರ್ತಿ, ಅಂಕಣಗಾರ್ತಿ ಶ್ರೀದೇವಿ ಕೆರೆಮನೆ ಭಾಜನರಾಗಿದ್ದಾರೆ. ಈಗಾಗಲೇ ತಮ್ಮ ಕಥೆ ಕವನ ಅಂಕಣಗಳಿಂದ ಮನೆಮಾತಾಗಿರುವ ಶ್ರೀದೇವಿ ಕೆರೆಮನೆಯವರು ಐದು ಕವನ ಸಂಕಲನ, ಐದು ಅಂಕಣ ಬರಹ ಸಂಕಲನ, ಎರಡು ಗಜಲ್ ಸಂಕಲನ ಒಂದು ಕಥಾ ಸಂಕಲನ ಹಾಗೇಯೇ ಒಂದು ವಿಮರ್ಶಾ ಸಂಕಲನ‌ ಹೀಗೆ ಒಟ್ಟೂ ಹದಿನಾಲ್ಕು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇನ್ನೂ ನಾಲ್ಕು ಪುಸ್ತಕಗಳು ಅಚ್ಚಿನ ಮನೆಯಲ್ಲಿವೆ. (ಎರಡು ಕವನ ಸಂಕಲನಗಳು, ಒಂದು ಕಥಾ ಸಂಕಲನ ಒಂದು ಇಂಗ್ಲಿಷ್ ಲೇಖಕರ ವಿಮರ್ಶಾ ಕೃತಿ) ೪೫ ವರ್ಷದ ಒಳಗಿನ ಹಾಗೂ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಹಿತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಒಂದು ಲಕ್ಷ ಇಪ್ಪತ್ತು ಸಾವಿರ ರೂಪಾಯಿಗಳ ಮೊತ್ತದ ಈ ಪ್ರಶಸ್ತಿಯನ್ನು ಈ ವರ್ಷ ಇಬ್ಬರಿಗೆ ನೀಡಲಾಗುತ್ತಿದ್ದು ಇನ್ನೊಬ್ಬರು ರಾಯಚೂರಿನ ಕವಿ ಚಿದಾನಂದ ಸಾಲಿಯವರಾಗಿದ್ದು ಇಬ್ಬರಿಗೂ ಪ್ರಶಸ್ತಿಯ ಮೊತ್ತವನ್ನು ತಲಾ ಅರವತ್ತು ಸಾವಿರ ರೂಪಾಯಿಯಂತೆ ನೀಡಲಾಗುವುದು ಎಂದು ಕಸಾಪ ಅಧ್ಯಕ್ಷರು, ಇಬ್ಬರು ಕಾರ್ಯದರ್ಶಿಗಳು ಹಾಗೂ ಕಸಾಪದ ಮಾಧ್ಯಮ ವಕ್ತಾರರಾಗಿರುವ ಪದ್ಮರಾಜ ದಂಡಾವತಿಯವರನ್ನು ಒಳಗೊಂಡ ಸಮಿತಿ ತೀರ್ಮಾನಿಸಿದೆ ಎಂದು ಕಸಾಪ ಅಧ್ಯಕ್ಷರಾದ ಶ್ರೀ ಮನು ಬಳಿಗಾರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ನಾಡಿನ ಹಲವಾರು ಪತ್ರಿಕೆಗಳಲ್ಲಿ ತಾವು ಬರೆಯುತ್ತಿರುವ ಅಂಕಣಗಳ ಮೂಲಕ ಜನಸಾಮಾನ್ಯರಲ್ಲಿ ಮನೆಮಾತಾಗಿದ್ದಾರೆ. ಇತ್ತೀಚೆಗೆ ಹಲವಾರು ವೆಬ್ ಪತ್ರಿಕೆಗಳಲ್ಲಿ ಪುಸ್ತಕ ವಿಮರ್ಶೆಯನ್ನು ಬರೆಯುತ್ತಿರುವ ಶ್ರೀದೇವಿ ಕೆರೆಮನೆಯವರಿಗೆ ಈಗಾಗಲೇ ನಾಡಿನ ಹತ್ತಾರು ಪ್ರಶಸ್ತಿಗಳು ಸಂದಿದ್ದು ಈ ಪ್ರತಿಷ್ಟಿತ ಪ್ರಶಸ್ತಿಯು ಇನ್ನೊಂದು ಹೆಮ್ಮೆಯ ಗರಿಯನ್ನು ಮೂಡಿಸಿದೆ. *******************************************

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ Read Post »

ಆರೋಗ್ಯ, ಇತರೆ

ಟೆಲಿಮೆಡಿಸನ್-

ಲೇಖನ ಟೆಲಿಮೆಡಿಸನ್- ದೂರವಾಣಿಯಮೂಲಕತಲುಪಿಸುವಸಹಾಯವಾಣಿ ಡಾ.ವಿಜಯಲಕ್ಚ್ಮೀಪುರೋಹಿತ್ ದೂರವಾಣಿಯಮೂಲಕವೇರೋಗಿಯ/ ರೋಗದಅವಸ್ಥೆತಿಳಿದುಕೊಂಡುಸೂಕ್ತಸಲಹೆ, ಸಂಶಯಪರಿಹಾರ, ಪಥ್ಯಪಾಲನೆ, ಔಷಧಿ, ಉಪಚಾರಕ್ರಮ, ಮನೋಸ್ಥೈರ್ಯಬೆಳೆಸುವದು,ಅವಶ್ಯಕತೆಇದ್ದಲ್ಲಿಅಂಬುಲನ್ಸವ್ಯವಸ್ಥೆಕಲ್ಪಿಸುವದು, ರೋಗಿಯನ್ನಸೂಕ್ತವಾದಆಸ್ಪತ್ರೆಗೆಸೇರಿಸುವದುಇತ್ಯಾದಿಸೇವೆಗಳನ್ನುಬರೀದೂರವಾಣಿಸಂಭಾಷಣೆಯಮೂಲಕಒದಗಿಸುವಮಹತ್ವದಕಾರ್ಯವನ್ನುಈಟೆಲಿಮೆಡಿಸಿನ್ಸೇವೆಯಮೂಲಕಮಾಡಲಾಗುತ್ತದೆ. ಕೋವಿಡ 19 , ಇದುಕೊರೊನಾಎಂಬವೈರಸ್ಮುಖಾಂತರಮನುಕುಲಕ್ಕೆಬಂದುತೊಂದರೆಉಂಟುಮಾಡಿದಹೊಸಕಾಯಿಲೆ . ಕಣ್ಣು, ಮೂಗುಬಾಯಿಯಮೂಲಕಮಾನವದೇಹವನ್ನುಸೇರುವಈವೈರಾಣುಗಂಟಲಪ್ರವೇಶಿಸಿಅಲ್ಲಿಂದlungs ಪುಪ್ಪುಸದಕಾರ್ಯಕ್ಷಮತೆಯನ್ನುತಗ್ಗಿಸುತ್ತಹೋಗುತ್ತದೆ. ಹಾಗೆಯೆಉಸಿರಾಟದತೊಂದರೆಗಂಭೀರವಾಗಬಹುದು, ಅಲ್ಲದೆಬೇರೆಅವಯವಗಳಿಗೂರೋಗಹರಡಿತೀವ್ರತೊಂದರೆಉಂಟಾಗಬಹುದುಒಮ್ಮೊಮ್ಮೆರೋಗಿಯುಸಾವನ್ನಪ್ಪಬಹುದು. ಇಂತಹವಿಷಮಪರಿಸ್ಥಿತಿಯಲ್ಲಿನಮ್ಮಕರ್ನಾಟಕಸರಕಾರವನ್ನುಅವರಶ್ಲಾಘನೀಯಕೆಲಸವನ್ನುನಾವೆಲ್ಲಮೆಚ್ಚಲೇಬೇಕು. “ಆಪ್ತಮಿತ್ರ“ಸಹಾಯವಾಣಿಸಂಪರ್ಕನಾಡಿನಎಲ್ಲಜನತೆಗೂಕಲ್ಪಿಸಿಕೋಟ್ಟಿದ್ದಾರೆ. ಈಸಹಾಯವಾಣಿಯುನಮ್ಮಮಾನ್ಯಮುಖ್ಯಮಂತ್ರಿಗಳಾದಶ್ರೀಯಡಿಯೂರಪ್ಪನವರು, ಆರೋಗ್ಯಇಲಾಖೆಯಮಂತ್ರಿಗಳುಅಲ್ಲದೇ disaster management team (ವಿಪತ್ತುನಿರ್ವಹಣೆತಂಡ.) ಮತ್ತುಕರ್ನಾಟಕದಆರೋಗ್ಯಹಾಗೂಕುಟುಂಬರಕ್ಷಣೆಯವರೂ ( karnataka health and family welfare)ಈಸಹಾಯವಾಣಿಯಸದುದ್ದೇಶದಲ್ಲಿಭಾಗವಹಿಸಿದ್ದಾರೆ. ನಮ್ಮಆಯುಷ್ಯಇಲಾಖೆಯ joint director dr sridhar ಅವರೂ commissionar _ಆದಶ್ರೀಮತಿ ಮೀನಾಕ್ಷಿನೇಗಿಅವರುಸೇರಿದಂತೆರೋಗದಹತೋಟಿಗೆಸರಿಯಾದಸಮಯಕ್ಕೆಇದನ್ನುಸಾರ್ವಜನಿಕಬಳಕೆಗೆಸಿಧ್ದಪಡಿಸಿದ್ದಾರೆ. ಅಲ್ಲದೇಈಡಿಜಿಟಲ್ಆ್ಯಾಪ( digital app) ಮಾಡುವಲ್ಲಿ(Infosys )ಇನಫೋಸಿಸ್ಸಂಸ್ಥೆಯವರಸಹಾಯಹಸ್ತವೂಇದೆ. CRM system  develop ಮಾಡಿದ್ದಾರೆ. ಇದೊಂದು toll free ನಂಬರಾಗಿರುತ್ತದೆ. ಯಾರುಬೇಕಾದರೂಈಸಹಾಯವಾಣಿಗೆಕರೆಮಾಡಬಹುದು.ಇದಕ್ಕೆಯಾವಶುಲ್ಕಇಲ್ಲ. ಕರ್ನಾಟಕದಯಾವದೇಊರು, ಹಳ್ಳಿಯಿಂದಕರೆಮಾಡಿತಮ್ಮಆರೋಗ್ಯದಬಗ್ಗೆತಿಳಿದುಕೊಳ್ಳಬಹುದು. ಇಡೀನಮ್ಮರಾಜ್ಯದಲ್ಲಿಇಂತಹ 6  ಕೇಂದ್ರಗಳಿದ್ದುಬೆಂಗಳೂರು, ಮೈಸೂರು,ಮಂಗಳೂರುಇತ್ಯಾದಿಕಡೆಗಳಲ್ಲಿಈಕೇಂದ್ರಗಳಿವೆ. ಈಕೋವಿಡ್ಕಾಯಿಲೆಗೆಸಂಬಂಧಿಸಿದಂತೆನಮ್ಮಆಪ್ತಮಿತ್ರವು 2 ಹಂತದಲ್ಲಿಕಾರ್ಯನಿರ್ವಹಿಸುತ್ತದೆ. ಇಲ್ಲಿಮುಖ್ಯವಾಗಿinfluenza like illness,( Ili) severe acute respiratory Illness  (Sari) ಈರೋಗದಹಂತಗಳನ್ನುತಿಳಿದುಸಕಾಲಕ್ಕೆಸೂಕ್ತಸಹಾಯಒದಗಿಸುವಲ್ಲಿಬಹಳಸಹಾಯಕಾರಿಆಗಿದೆ. ಹಾಗೂಬಹಳಷ್ಟುಜನರುಹೊರದೇಶದಿಂದಬಂದತಕ್ಷಣವೇಈ app download ಮಾಡಿಕೊಂಡುನಮನ್ನ್ನುಸಂಪರ್ಕಿಸಿದಉದಾಹರಣೆಗಳಿವೆ. ಮೊದಲನೆಯಹಂತದಲ್ಲಿರೋಗಿಯಬಗ್ಗೆಎಲ್ಲಮಾಹಿತಿಸಂಗ್ರಹಿಸಿರುತ್ತಾರೆ. ಅಂದರೆರೋಗಿಯಹೆಸರು, ವಯಸ್ಸು, ಊರು, ಮನೆವಿಳಾಸ,ಅವರಿಗಿರುವಲಕ್ಷಣಗಳು, ಎಷ್ಟುದಿನಗಳಿಂದಶುರುಆಗಿದೆ, ಈಸಧ್ಯದಲಕ್ಷಣಹೊರತುಪಡಿಸಿಮತ್ತೆಏನಾದರೂಕಾಯಿಲೆಆಂದರೆರಕ್ತದಒತ್ತಡ, ಸಕ್ಕರೆಕಾಯಿಲೆ, ಮೂತ್ರಜನಕಾಂಗಗಳರೋಗ, ಕಾನ್ಸರ, ಅಥವಾಅವರಿಗೆಈಗಾಗಲೇಕೊರೊನಾಸೋಂಕುತಗುಲಿದೆಯಾ,? ಅಥವಾಕೊವಿಡ್ಪೇಶಂಟರೋಗಿಗಳಸಂಪರ್ಕಕ್ಕೆಬಂದಿರುತ್ತ್ತಾರಾ?ಅವರವಾಸಸ್ಥಳಅಥವಾಕಚೇರಿಯಲ್ಲ್ಲಾಗಲಿ, ಕೊವಿಡ್ಪೇಶಂಟ್ಇದ್ದಾರಾಅವರಸಂಪರ್ಕಕ್ಕೆಬಂದಿದಾರಾ? ಮತ್ತೆಕೆಲವುಜಾಗಗಳು hot spot, containment zone ಗಳಾಗಿದ್ದುಅಲ್ಲಿಂದಏನಾದರೂಆವ್ಯಕ್ತಿಬಂದಿದ್ದಾರಾಇತ್ಯಾದಿಮಾಹಿತಿಇರುತ್ತದೆ. ಅಂದರೆರೋಗಿಯಎಲ್ಲಸವಿವರವಾದಮಾಹಿತಿ patients  detailed historyಇದ್ದಲ್ಲಿಅದನ್ನ್ಅವರುಮೊದಲನೇಹಂತದಲ್ಲಿಉಲ್ಲೇಖಿಸಿರುತ್ತ್ತಾರೆ. ಈಮೊದಲಹಂತದಲ್ಲಿನರ್ಸಿಂಗ ,nursingಫಾರ್ಮಾpharmaಹಾಗೂಆಯುಷ(ayush )Jr ವೈದ್ದರುಕಾರ್ಯನಿರ್ವಹಿಸುತ್ತಾರೆ. ಹಾಗೂಮೊದಲನೇಹಂತದವರುದಿನಾಲೂಒಮ್ಮೆಎಲ್ಲರೋಗಿಗಳಜೊತೆಮಾತನಾಡಿಅವರಆರೋಗ್ಯವಿಚಾರಿಸುತ್ತಾರೆ. ಏನಾದರೂಅವಶ್ಯವಿದ್ದಲ್ಲಿಮತ್ತೆಎರಡನೇಹಂತಕ್ಕೆಕಳಿಸುತ್ತಾರೆ. ಎರಡನೇಹಂತಕ್ಕೆಈವಿವರಗಳುಬಂದಾಗಅಲ್ಲಿಹೆಚ್ಚಾಗಿ30ವರ್ಷಅನುಭವೀವೈದ್ದರುಇಂಟಿಗ್ರೆಟೆಡಮೆಡಿಸಿನಓದಿದವೈದ್ಯಕೀಯವೃತ್ತಿಯವರುತಮ್ಮಸೇವೆಸಲ್ಲಿಸುತ್ತಾರೆ.ನಮಗೆಒಂದುಪೇಶಂಟ್ಬಂದತಕ್ಷಣನಮ್ಮಮೊಬೈಲಗೆಒಂದು sms ಮೆಸೆಜಕೂಡಬರುತ್ತ್ತದೆ. ಇಂತಹಹೆಸರಿನಪೇಷಂಟ್ನಿಮ್ಮಸೇವೆಗೆಕಾಯುತ್ತಿದ್ದಾರೆದಯವಿಟ್ಟುಕರೆಗೆಸ್ಪಂದಿಸಿಅಂತತಿಳಿಸಿರುತ್ತ್ದೆ.ನಾವುಎಸ್ಟುಬೇಗನಮ್ಮಿಂದಆಗುತ್ತದೊಅಂದರೆ ಒಂದು_5 ರಿಂದ10 ನಿಮಿಷದಒಳಗೆಆಕೇಸನ್ನುವಿಚಾರಣೆಗೆತೆಗೆದುಕೊಳ್ಳುತ್ತ್ತೆವೆ. ಮೊದಲನೇಹಂತದಲ್ಲಿಬಂದಮಾಹಿತಿಗಳನ್ನುಕೂಲಂಕುಷವಾಗಿಓದಿತಿಳಿದುಕೊಂಡುತಕ್ಷಣಪೇಶಂಟ್ಗೆನಾವುಆಪ್ತಮಿತ್ರಸಹಾಯವಾಣಿಯಮೂಲಕಫೋನ್ಮಾಡುತ್ತೆವೆ. ಆಗಪೇಸಂಟಗೆನಾವುಆಪ್ತಮಿತ್ರದಿಂದಡಾಕ್ಟರಕರೆಮಾಡುತ್ತ್ತಿದ್ದೆವೆ,ನಿಮ್ಮಸಮಸ್ಯೆಏನುಅಂತಕೇಳಿತಿಳಿದುಕೋಳ್ಳುತ್ತೆವೆ. ಆಗಅವರಲಕ್ಷಣ, ರೋಗದುಲ್ಬಣತೆಅಂದರೆ, ನೆಗಡಿಕೆಮ್ಮು, ಜ್ವರ,  ಮತ್ತಿನ್ನಿತರಲಕ್ಷಣಗಳಅವಸ್ಸ್ಥೆತಿಳಿದುಕೊಂಡುರೊಗಿಗೆಆವೇಳೆಯಲ್ಲಿಯಾವತರಹದಸೇವೆಯಅವಶ್ಯಕತೆಇದೆಎಂಬುದನ್ನುಪರೀಕ್ಷಿಸಿಅದಕ್ಕೆತಕ್ಕಂತೆ SMS message ಮೂಲಕಔಷಧಕಳಿಸಿಕೊಟ್ಟುಹೇಗೆಸೇವಿಸಬೇಕುಅಂತವಿವರಕೊಟ್ಟಿರುತ್ತದೆ . ಇನ್ನುಕೆಲವರಿಗೆರೋಗದಬಗ್ಗೆಸರಿಯಾದತಿಳುವಳಿಕೆಇಲ್ಲದೆವ್ರಥಾಗಾಬರಿಯಲ್ಲಿದ್ದುಮಾನಸಿಕಉದ್ವೇಗಕ್ಕೆಒಳಗಾಗಿರುತ್ತಾರೆ. ಅಂತಹರೋಗಿಗಳಿಗೆಸೂಕ್ತವಾದತಿಳುವಳಿಕೆ, counselling ಮಾಡಿಅವರಸಂಶಯಪರಿಹಾರಮಾಡಲಾಗುತ್ತದೆ . ಇನ್ನುಕೆಲವರಿಗೆಜ್ವರಸತತವಾಗಿಬರುತ್ತಿದ್ದುಅವರನ್ನುಅವರಮನೆಯಹತ್ತಿರದಜ್ವರಚಿಕಿತ್ಸಾಲಯ(fever clinic) ಗೆವಿಳಾಸವನ್ನುನಾವೇಕೊಟ್ಟುಕಳುಹಿಸುತ್ತೆವೆ. ಈ_app ತಯಾರುಮಾಡುವಾಗಲೇಕರ್ನಾಟಕದಎಲ್ಲಊರುಗಳಲ್ಲಿಜನರಿಗೆಅನಕೂಲವಾಗುವಂತೆfever clinic ಗಳವಿಳಾಸತಿಳಿಸುವವ್ಯವಸ್ಥೆಯನ್ನುಬಹಳಚೆನ್ನಾಗಿಕಲ್ಪಿಸಿಕೊಟ್ಟಿದೆ. ನಾವುಕೂಡನಮ್ಮ computer ನಲ್ಲಿನೊಡಿತತ್ಕ್ಷಣಕ್ಕೆಅದನ್ನುರೋಗಿಗೆಕೊಟ್ಡಾಗಆರೋಗಿಯುಸಕಾಲಕ್ಕೆfever clinin ತಲುಪಬಹುದು. ಅಲ್ಲಿಅವಶ್ಯಕತೆಇದ್ದಾಗ swab test ಮಾಡುತ್ತಾರೆ, ಇಲ್ಲವಾದಲ್ಲಿರೋಗಿಯನ್ನು physical exam ಮಾಡಿಅವರವರಲಕ್ಷಣಪ್ರಕಾರಔಷಧಿಸಲಹೆಮಾಡುತ್ತಾರೆ. ಅದೆಲ್ಲಶುಲ್ಕರಹಿತವಾದಪ್ರಕ್ರಿಯೆಗಳು. ಮತ್ತೆಕೆಲವುಸಂದರ್ಭಗಳಲ್ಲಿಉಸಿರಾಟದತೊಂದರೆ, ತೀವ್ರಜ್ವರಕೊವಿಡ್ಪಾಸಿಟಿವ್ಇದ್ದಾಗನಮ್ಮಕೊವಿಡ್ಅಂಬುಲನ್ಸಸರ್ವೀಸ್ಬಹಳಉತ್ತಮವಾಗಿಕಾರ್ಯನಿರ್ವಹಿಸುವಲ್ಲಿಸಫಲಆಗಿದೆ. (Covid ambulance service). Ambulance drivers ಗೆನಮ್ಮಮೆಸೆಜ್ಹೋಗಿ, ಅದರಜೊತೆಗೆರೋಗಿಯಹೆಸರು, ವಿಳಾಸ, ಫೋನ್ನಂಇತ್ಯಾದಿಗಳುಮಾಹಿತಿಯಾಗಿದ್ದುರೋಗಿಯನ್ನುಸರಿಯಾದಆಸ್ಪತ್ರೆಗೆ, ಸರಿಯಾದವೇಳೆಯಲ್ಲಿತಲುಪಿಸುವಕೆಲಸಮಾಡುತ್ತಾರೆ. ಅದುಸರಕಾರಿಅಥವಾಖಾಸಗೀಆಸ್ಪತ್ರೆಆಗಿರಬಹುದು‌ರೋಗಿಯಇಚ್ಛೆಯ , ಅನುಕೂಲದಪ್ರಕಾರಅವರನ್ನುಆಸ್ಪತ್ರೆಗೆಸೇರಿಸಲಾಗುತ್ತದೆ. ಆಸ್ಪತ್ರೆಗಳಲ್ಲಿಯೂಕೆಲವುವಿಧಗಳಿವೆ: *CCC: covid care centre :ಇದರಲ್ಲಿಲಕ್ಷಣಗಳಿಲ್ಲದಆದರೆಕೊವಿಡ್ಪಾಸಿಟಿವ್ಇದ್ದುಜೊತೆಗೆಕಡಿಮೆರೋಗದತೊಂದರೆಗಳುಕಂಡುಬಂದಲ್ಲಿಈಕೇಂದ್ರಗಳಿಗೆದಾಖಲಿಸಲಾಗುವದು. (Asymptomatic and mild cases) *DCHC: Dedicated Covid Health Centre. ಇದರಲ್ಲಿcovid positive ಇದ್ದು,ಕಡಿಮೆಲಕ್ಷಣಗಳಿಂದಹಿಡಿದುಮಧ್ಯಮರೋಗಇದ್ದವರನ್ನುದಾಖಲಿಸಲಾಗುತ್ತದೆ. ಹಾಗೂಇಂತಹವರಿಗೆ _24 ಗಂಟೆಗಳನಿಗಾಇಟ್ಟಿರಲಾಗುತ್ತದೆ. *DCH: Dedicated Covid Hospital: ಇದರಲ್ಲಿ intensive care unit(icu), ventilator ವೆಂಟಿಲೇಟರಗಳಸೌಲಭ್ಯಗಳಿದ್ದುಬಹಳತೀವ್ರಅವಸ್ಥೆಯಲ್ಲಿಯರೋಗಿಗಳನ್ನುಇರಿಸಲಾಗುತ್ತದೆ. ಹಾಗೂರೋಗಿಯನ್ನುಬಹಳಜಾಗರೂಕವಾಗಿನೋಡಿಕೊಳ್ಳಲಾಗುತ್ತದೆ. ಈರೀತಿನಮ್ಮಆಪ್ತಮಿತ್ರಸಹಾಯವಾಣಿಯಲ್ಲಿರೋಗಿಯಅವಶ್ಯಕತೆನೋಡಿಕೋಂಡುತಕ್ಕವ್ಯವಸ್ಥೆಒದಗಿಸಲಾಗುತ್ತದೆ. ಅದರಪ್ರಕಾರವಾಗಿ OTC ( over the counter) Health Counselling , Ambulance Assignment,, Non Medical Case, Follow up ಮುಂತಾದಸಲಹೆಗಳಲ್ಲಿನಾವುಯಾವದನ್ನುರೋಗಿಗೆಸೂಚಿಸಿದರೀತಿಯಲ್ಲಿಅದನ್ನತಿಳಿಸಿಆಕೇಸನ್ನುಅವತ್ತಿಗೆಮುಗಿಸುತ್ತೆವೆ.(Close) ಮಾಡಿರುತ್ತೆವೆ. ಇನ್ನುintegrated drs ಬಗ್ಗೆಹೇಳಬೆಕೆಂದರೆನಾವುBAMS 51/2 years ಓದಿಮುಂದೆ_2_ವರ್ಷದ integrated medicine  short term course ನ್ನುಆಗಿನಬೇಂಗಳೂರುವಿಶ್ವವಿದ್ಯಾಲಯದಿಂದಆಧುನಿಕಶಿಕ್ಷಣತರಬೇತಿಪಡೆದುವಿಕ್ಟೋರಿಯಾ, ವಾಣಿವಿಲಾಸಕೆಸಿಜನರಲ್ಮುಂತಾದಆಸ್ಪತ್ರೆಗಳಲ್ಲಿಪೂರ್ಣಾವಧಿಯತರಬೇತಿಪಡೆದವರಾಗಿರುತ್ತೆವೆ. ಹಾಗೂಈಗಎಲ್ಲವೈದ್ಯರು25-30 ವರ್ಷ family physician ಆಗಿಸಮಾಜದಲ್ಲಿಸೇವೆಸಲ್ಲಿಸಿದವರಾಗಿದ್ದೇವೆ. ಅಷ್ಟೇಅಲ್ಲದೇಈಆಪ್ತಮಿತ್ರಸಹಾಯವಾಣಿಯಕೆಲಸವನ್ನು computer ನಲ್ಲಿಮಾಡಬೇಕಾದಅನಿವಾರ್ಯತೆಯಲ್ಲಿಎಲ್ಲವೈದ್ಯರೂಅದನ್ನು__operate ಮಾಡುವದನ್ನುಕಡಿಮೆಅವಧಿಯಲ್ಲಿಕಲಿತುಸರಕಾರದಿಂದಒದಗಿಸಿರುವ training session ನನ್ನುಎಲ್ಲವೈದ್ರುಉತ್ಸಾಹದಿಂದಕಲಿತುಕೆಲಸಕ್ಕೆಸಿಧ್ದರಾದರು. ಕೆಲವುವೈದರುತಮ್ಮತಮ್ಮ clinic ಗಳಲ್ಲಿಯೂಕೆಲಸಮಾಡಿprivate practice ನಲ್ಲೂರೋಗಿಗಳನ್ನುಪರೀಕ್ಷಿಸಿ, ತಮ್ಮಜೀವನದಪರಿವೆಯನ್ನುಲೆಕ್ಕಿಸದೇ, ತಮ್ಮಕುಟುಂಬದವರಿಂದದೂರಉಳಿದು, ಈಸರಕಾರದಸಹಾಯವಾಣಿಯಲ್ಲಿಕೈಜೋಡಿಸಿಅತ್ಯಂತಮಹತ್ತರವಾದಶ್ಲಾಘನೀಯವಾದಕಾರ್ಯವನ್ನುಮಾಡಿದ್ದಾರೆಂದುಹೇಳಲುಹೆಮ್ಮೆಅನಿಸುತ್ತದೆ. ಎರಡೂಹೊತ್ತಿನclinic ನೋಡಿಕೊಂಡುಈಕೆಲಸದಲ್ಲ್ಲೂಕೈಜೋಡಿಸಿದವರಿದ್ದಾರೆ.  ಆಪ್ತಮಿತ್ರಸಹಾಯವಾಣಿಯುಎರಡು shift ನಲ್ಲಿಕೆಲಸನಿರ್ವಹಣೆಮಾಡುತ್ತದೆ. ಒಂದುಬೆಳಿಗ್ಗೆ8 a. M to 2 p.m ೮ಗಂಟೆಯಿಂದಮಧ್ಯಾಹ್ನ೨ಗಂಟೆವರೆಗೂಹಾಗೂ2 p.m to _9 p.m.(೨_ಗಂಟೆಯಿಂದರಾತ್ರಿ೯ಗಂಟೆ) ವರೆಗೂಕಾರ್ಯಮಾಡುತ್ತದೆ. ನಮ್ಮನಮ್ಮಕೆಲಸದಅವಧಿ ಯಲ್ಲಿನಮಗೆಬಂದಿರುವಪೇಶಂಟಗಳನ್ನುಸಂಪರ್ಕಿಸಿಸೂಕ್ತನಿರ್ಧಾರತೆಗೆದುಕೊಳ್ಳಬೇಕಾಗುತ್ತದೆ. ಹಾಗೂಒಂದುವೇಳೆಎಲ್ಲಪೇಶಂಟಟಿಕೆಟ್ಗಳನ್ನುಪೂರ್ತಿಗೊಳಿಸಲಾಗದಿದ್ರೆಮುಂದೆಸ್ವಲ್ಪಹೆಚ್ಚಿನಸಮಯತಗೊಂಡುಅವತ್ತಿನಎಲ್ಲರೋಗಿಗಳನ್ನುಅಟೆಂಡ್ಮಾಡಬೇಕಾಗುತ್ತದೆ. ಅಲ್ಲದೇನಮ್ಮಎಲ್ಲಮಹಿಳಾವೈದ್ಯರಪಾಲೂಇದರಲ್ಲಿಬಹುದೊಡ್ಡದಾಗಿದೆ.clinic ನೋಡಿಕೊಂಡು, ಮನೆಯಲ್ಲಿಯಾವಕೆಲಸದವರಸಹಾಯಇಲ್ಲದೇಹೋದರೂಮನೆಕೆಲಸದಜವಾಬ್ದಾರಿಯನ್ನುತಮ್ಮಹೆಗಲಿಗೇರಿಸಿಕೊಂಡುಹೊತ್ತುಹೊತ್ತಿಗೆಮನೆಯಎಲ್ಲರಊಟತಿಂಡಿಯನ್ನುಮಾಡುವಲ್ಲಿಚಾಕಚಕ್ಯತೆಯನ್ನುತೋರಿಸಿ,ಅಷ್ಟೇಲವಲವಿಕೆಯಿಂದಈಸಹಾಯವಾಣಿಯಕೆಲಸದಲ್ಲಿಕೈಜೋಡಿಸಿದ್ದಾರೆ. ಅದಕ್ಕೇಹೇಳುವದಲ್ವೇ“ತೊಟ್ಟಿಲತೂಗುವಕೈಜಗತ್ತನ್ನೇತೂಗಬಲ್ಲದು”ಅಂತ. ಎಷ್ಟೊಮನೆಗಳಲ್ಲಿಪುರುಷರೂಇಂತಹಸಂದಿಗ್ದಸಮಯದಲ್ಲಿಮನೆಕೆಲಸದಲ್ಲಿಕೈಜೋಡಿಸಿದ್ದುಹೊಗಳಿಕೆಗೆಸೂಕ್ತವಾದದ್ದು. ಎಲ್ಲವೈದ್ದರೂತಮ್ಮವಯಸ್ಸನ್ನುಮರೆತುಅತೀಉತ್ಸಾಹದಿಂದಸರಕಾರದಜೊತೆನಿಂತು, ಮಾನವೀಯತೆಯಮಮಕಾರವನ್ನುಎತ್ತಿಹಿಡಿದಿದ್ದಾರೆ. ಹಾಗೂಜನಪದೋಧ್ವಂಸ (pandemic disease)ರೋಗಗಳಬಗ್ಗೆನಮ್ಮಪುಸ್ತಕಗಳಲ್ಲಿಓದಿತಿಳಿದರೂಪ್ರತ್ಯಕ್ಷವಾಗಿನಿಭಾಯಿಸುವಅನುಭವವೇಬೇರೆ . ಅದೊಂದುಸಂತ್ರಪ್ತಿ,ಆನಂದನಿಜಆದರೆಒಮ್ಮೊಮ್ಮೆರೋಗಿಯತೀವ್ರಸ್ವರೂಪದಸಂದರ್ಭದಲ್ಲಿ , ಅವರಗೋಳುಅವರಮನೆಯಪರಿಸ್ಥಿತಿ, ಆರ್ಥಿಕಕಷ್ಟ, ಸಣ್ಣಸಣ್ಣಮಕ್ಕಳಿಗೂರೋಗಅಂಟಿರುವದು , ಎಲ್ಲರಮನಸ್ಸಿನಆತಂಕ, ಗಾಬರಿರೋಗಿಗಳುಅಂಬುಲನ್ಸನಲ್ಲಯೇಉಸಿರಾಟದತೊಂದರೆಯಿಂದಬಳಲುವದುಇವೆಲ್ಲಕೇಳಿನಮ್ಮಹ್ರದಯವೂಮಮಕಾರದಿಂದಮಿಡಿದುನಮ್ಮೆಲರಕಣ್ಣಂಚಿನಲಿನೀರುಬಂದಿದ್ದೂಇದೆ. ವೈದ್ಯರಾಗಿನಮ್ಮಕೈಲಾದಸ್ಟುಮಾಡಿದ್ದೇವೆಅಂತನಾವೇಸಮಾಧಾನಮಾಡಿಕೊಂಡರೂಪೇಶಂಟಗಳಆರ್ತನಾದನಮ್ಮಕಿವಿಯಲ್ಲಿಎಷ್ಟೋಹೊತ್ತುಇದ್ದೇಇರುತ್ತದೆ.ಇದೇಸಮಯದಲ್ಲಿನಮ್ಮಕೆಲವುವೈದ್ಯರುತಾವೇಸ್ವತ: ಕಾಯಿಲೆಗೆತುತ್ತಾದಉದಾಹರಣೆಗಳೂಇವೆ. ಕೆಲವರುಪರಿವಾರದಇತರಸದಸ್ಯರೊಡನೆಆಸ್ಪತ್ರೆಸೇರಿಚಿಕಿತ್ಸೆಪಡೆದುಕೊಂಡರೆಇನ್ನಕೆಲವರುಮನೆಯಲ್ಲಿಯೇಇದ್ದು(home quarantine ) ಆಗಿದ್ದುಚಿಕಿತ್ಸೆಪಡೆದಿದ್ದಾರೆ. ದೈವವಶಾತ್ನಮ್ಮತಂಡದವೈದ್ದರುಸಮಯಕ್ಕೆಸರಿಯಾಗಿಚಿಕಿತ್ಸೆಪಡೆದುಗುಣಮುಖರಾಗಿದ್ದಾರೆಎಂಬುವದೇಸಮಾಧಾನಕರವಿಷಯ. ನಮ್ಮಈಕೆಲಸಕ್ಕೆಬಹಳಜನರೋಗಿಗಳುಧನ್ಯವಾದಗಳನ್ನುಹೇಳುತ್ತಬಹಳತ್ರಪ್ತ್ತಿಯನ್ನುಹೋಂದಿದ್ದಾರೆ. ನಾವುಎಲ್ಲಸಲಹೆಗಳನ್ನುನೀಡಿದಬಳಿಕವೂಎಷ್ಟೋಸಲಪೇಶಂಟಗಳುಧನ್ಯವಾದಹೇಳುತ್ತಲೇಇರುತ್ತಾರೆ. ಹಾಗೂಸಾರ್ವಜನಿಕರೂಕೂಡಸಾಕಸ್ಟುಅರಿವುಮೂಡಿಸಿಕೊಂಡಿದ್ದಾರೆ. ಮಾಸ್ಕಧರಿಸುವದು,ಜನಗಳಮಧ್ಯಅಂತರಕಾಪಾಡಿಕೊಳ್ಳುವದು, ಕೈಗಳನ್ನುಶುಚಿಯಾಗಿಟ್ಟುಕೊಳ್ಳುವದು , ಆರೋಗ್ಯಕರಆಹಾರಸೇವನೆ, ವ್ಯಾಯಾಮ, ಧ್ಯಾನ, ಅನಾವಶ್ಯಕವಾಗಿಹೊರಗಡೆತಿರುಗಾಡದೇಇರುವದು, ಪ್ರತಿಷ್ಟೆಯನ್ನುಪಕ್ಕಕ್ಕಿಟ್ಟುಸರಳವಾದಕೆಲವೇಜನಸಮೂಹದಲ್ಲಿಹಬ್ಬ, ಮದುವೆ, ಹುಟ್ಟುಹಬ್ಬದಆಚರಣೆಗಳನ್ನುಅನುಸರಿಸುತ್ತಿದ್ದಾರೆ. ಹೀಗಾಗಿಬಹಳಜನಕಾಯಿಲೆಬರದಂತೆಕಾಪಾಡಿಕೊಳ್ಳುವಲ್ಲಿಸಫಲರಾದರೆ, ಇನ್ನುಬಹಳಜನಕಾಯಿಲೆಬಂದನಂತರವೂಚೆನ್ನಾಗಿಚೇತರಿಸಿಕೊಂಡದ್ದನ್ನುಕಾಣುತ್ತೆವೆ. ಹಾಗೂನಮ್ಮಸರಕಾರವೂಈಗಬಹಳಸ್ಟುವೈದ್ಯರನ್ನುಇದರಲ್ಲಿನೇಮಕಮಾಡಿಯಾರೂತೊಂದರೆಗೀಡಾಗದೇಬೇಗನೆಚಿಕಿತ್ಸೆಸೌಲಭ್ಯಒದಗಿಸುವಲ್ಲಿಮುಂದಾಗಿದೆ.‌ ಹಾಗಾಗಿಮೊದಮೊದಲುಒಬ್ಬೊಬ್ಬವೈದ್ಯರಿಗೂಅತಿಯಾದಸಂಖ್ಯೆಯಲ್ಲಿಪೇಶಂಟಬರುತ್ತಿದ್ದುಈಗಸ್ವಲ್ಪಸುಧಾರಣೆಕಂಡುಬಂದಿದೆ. ಇದಕ್ಕೆಲ್ಲಪರಿಹಾರಬೇಗಸಿಗಲಿ,ಎಲ್ಲರಜೀವನಸುಗಮವಾಗಿಸಾಗಲಿಅಂತಭಗವಂತನಲ್ಲಿಪ್ರಾರ್ಥೊಸೋಣ. **********************************************

ಟೆಲಿಮೆಡಿಸನ್- Read Post »

ಇತರೆ

ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ

ಲೇಖನ ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ ನಿಂತು ಮಲ್ಲಿಕಾರ್ಜುನ ಕಡಕೋಳ  ಕಳೆದವರ್ಷದವರೆಗೆ ಹೈದ್ರಾಬಾದ್ ಕರ್ನಾಟಕವೆಂದು ಕರೆಯಲಾಗುತ್ತಿದ್ದ  ಕಲಬುರಗಿ ನಾಡನ್ನು ೧೭.೦೯.೨೦೧೯ ರಂದು ಮುಖ್ಯಮಂತ್ರಿ ಯಡಿಯೂರಪ್ಪ  “ಕಲ್ಯಾಣ ಕರ್ನಾಟಕ” ಎಂದು ನಾಮಕರಣ ಮಾಡಿದರು. ಆ ಮೂಲಕ  ಹೈದ್ರಾಬಾದ್ ಕರ್ನಾಟಕ ಕನ್ನಡನಾಡ ಪ್ರಜ್ಞೆಗೆ ಹೊಸವಿನ್ಯಾಸದ ತಾಜಾ ತಾಜಾ ಖುಷಿ ದೊರಕಿದಂತಾಗಿದೆ. ಇದು ಸಾಂಸ್ಕೃತಿಕವಾಗಿ ವಿನೂತನ ಉಮೇದು. ಅಂದು ಕಳಚೂರಿ ಬಿಜ್ಜಳನ ಕಲ್ಯಾಣ ರಾಜ್ಯದ ಮಂತ್ರಿಯಾಗಿದ್ದ ಬಸವಣ್ಣ, ಪ್ರಭುತ್ವದ ಎಲ್ಲೆಮೀರಿ ವಚನಗಳ ಮೂಲಕ ಜನಚಳವಳಿ ರೂಪಿಸಿದ್ದು ಜನಕಲ್ಯಾಣದ ಕಳಕಳಿಯ ದ್ಯೋತಕ. ಜನರಿಗೆ ಮತ್ತೆ ಅಂದಿನ ಕಲ್ಯಾಣದ  ಕನಸುಗಳನ್ನು ಇಂದು ಕಾಣುವ ತವಕ. ೧೫.೦೮.೧೯೪೭ ರಂದು ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಕನ್ನಡ ನೆಲದ ಅಂದಿನ ಕಲಬುರ್ಗಿ, ಬೀದರ, ರಾಯಚೂರು ಈ ಮೂರು ಜಿಲ್ಲೆಗಳು, ಮರಾಠಿಯ ಐದು, ತೆಲಂಗಾಣದ ಎಂಟು ಜಿಲ್ಲೆಗಳು ಅಂದಿನ ಮುಸ್ಲಿಂ ದೊರೆ ಮೀರ್ ಉಸ್ಮಾನ್ ಅಲಿಖಾನ್ ಬಹದ್ದೂರ್  (ಇದು ನಿಜಾಮನ ಪೂರ್ಣ ಹೆಸರು)  ಆಡಳಿತದಲ್ಲೇ ಇದ್ದವು. ಹತ್ತು ಹಲವು ಹೋರಾಟಗಳ ಫಲವಾಗಿ ೧೭.೦೯.೧೯೪೮ ರಂದು ಭಾರತದ ಒಕ್ಕೂಟಕ್ಕೆ ಇವು ಸೇರಿದವು. ಒಂದಲ್ಲ, ಎರಡಲ್ಲ ಅಜಮಾಸು ಆರುನೂರು ವರ್ಷಗಳ ಸುದೀರ್ಘ ಕಾಲದ ದೇಶಿಯ ಪರಕೀಯತೆಯಲ್ಲಿದ್ದುದು ಹೈದ್ರಾಬಾದ ಕರ್ನಾಟಕ. ಸಹಜವಾಗಿ ಉರ್ದು, ದಖನಿ, ಮೋಡಿ, ಮರಾಠಿ, ತೆಲುಗು, ಕನ್ನಡಗಳ ಬಹುಭಾಷಾ ಸೌಹಾರ್ದತೆ, ಸಾಮಾಜಿಕ ಸೌಂದರ್ಯ ಸಂಸ್ಕೃತಿಯ ಚಾರಿತ್ರಿಕ ನೆಲ ಇದು. ಇವತ್ತಿಗೂ ದಖನಿ ಛಾಯೆಯ ಉರ್ದು, ಮರಾಠಿ ಮೋಡಿಯ ಹಿಂದಿ ಭಾಷಾ ಸಂಸ್ಕೃತಿಗಳು  ಇಲ್ಲಿನ ಕನ್ನಡದ ಬದುಕಿನ ತುಂಬೆಲ್ಲ ಹಾಸು ಹೊಕ್ಕಾಗಿವೆ.  ಘಮ ಘಮಿಸುವ ಸೂಜಿಮಲ್ಲಿಗೆಯ ಹೂವರಳಿದಂತಹ ಖಮ್ಮನೆಯ ಉರ್ದು ಮಾತಾಡುವ ಮುಸ್ಲಿಮೇತರ ಅನೇಕರು ಇಲ್ಲಿರುವುದು ಸರ್ವೇಸಾಮಾನ್ಯ. ಅದೇ ನಮ್ಮ ಬೀದರ ಕನ್ನಡದ ರಾಗಮಾಧುರ್ಯವೇ ತುಸು ಭಿನ್ನ. ಅದನ್ನವರು ಎನ್ಕಿ, ತ್ವಾಡೇ ಫರಕ್ ಅಂದಾರು… ” ಯಾನ ಮಾಡ್ಲತ್ತರಿ… ಹೊಂಟೀರಿ… ನೀ ಹೋರಿ… ನಾ.. ಬರ್ತಾ…”  ಹೀಗೆ ಅದರ ದೇಸಿಯತೆಯ ಜೀವಧ್ವನಿ. ಕಲಬುರ್ಗಿಯದು ಹಾಂಗಲ್ಲ… ಯವ್ವಾ, ಯಪ್ಪಾ, ಯಣ್ಣಾ, ಯಕ್ಕಾ ಎನ್ನುವ ಮೊಗಲಾಯಿಯ ಜವಾರಿ ಬನಿ.  ನಿಜಾಮನ ಕಾಲದಲ್ಲಿ ಭಾಳ ಸಂಖ್ಯೆಯ ಸೂಫಿ – ಸಂತರು, ತತ್ವಪದಗಳ ಅನುಭಾವಿಗಳು ಮೈ ಮನಸು ಬಿಚ್ಚಿ ಕನ್ನಡದಲ್ಲಿ ಮಹಾಕಾವ್ಯಗಳನ್ನೇ ರಚಿಸಿದ್ದಾರೆ. ಹಾಗೆಂದು  ಆಳರಸ ನಿಜಾಮ ಇವರಿಗೆ ಪ್ರೇರಕ, ಪ್ರೋತ್ಸಾಹಕನೇನು ಆಗಿರಲಿಲ್ಲ.‌ ಆದರೆ  ಸೂಫಿ, ಅವಧೂತ, ಆರೂಢ ಕವಿಗಳಿಗೆ ಯಾವುದೇ ಘೋಷಿತ ಇಲ್ಲವೇ ಅಘೋಷಿತ ನಿರ್ಬಂಧಗಳನ್ನು ಆತ ವಿಧಿಸಿರಲಿಲ್ಲ ಎಂಬುದು ಮುಖ್ಯ. ಜಂಗಮನಾಗಬೇಕಾದರೆ / ಮನಲಿಂಗ ಮಾಡಿಕೊಂಡಿರಬೇಕು// ಅಂತ ಚನ್ನೂರ ಜಲಾಲ ಸಾಹೇಬ ಹಾಡಿದರೆ ಫಕೀರನಾಗಬೇಕಾದರೆ/ ಮನಃ ಧಿಕ್ಕಾರ ಮಾಡಿಕೊಂಡಿರಬೇಕು// ಇದು ಕಡಕೋಳ ಮಡಿವಾಳಪ್ಪನವರು ಜಲಾಲ ಸಾಹೇಬರಿಗೆ ಕೊಡುವ ಉತ್ತರ. ಹೀಗೆ ಇಬ್ಬರದು ಬೇರೆ ಬೇರೆ ಮತ ಧರ್ಮಗಳ ಒಂದೇ ಗುರುಮಾರ್ಗ ಪಂಥದ ಸೌಹಾರ್ದಯುತ, ಸಾಂಸ್ಕೃತಿಕ ಸಂವಾದದ ಸಣ್ಣದೊಂದು ಝಲಕ್. ಇಂಥ ನೂರಾರು ನಿದರ್ಶನಗಳು ಇಲ್ಲಿವೆ.  ಸಬ್  ಕಹತೆ ಹೈ ಈಶ್ವರ ಅಲ್ಲಾ ಅಲ್ಲಾ/ ಇದರ ಒಳಮರ್ಮ ಯಾರಿಗೂ ತಿಳಿದಿಲ್ಲಾ// ಹೀಗೆ ಉರ್ದು ಕನ್ನಡ ಮಿಶ್ರಿತ ಸಂಕರ ಪ್ರಜ್ಞೆಯಿಂದ ರೂಪುಗೊಂಡ ಅನೇಕ ತತ್ವಪದಗಳ ಭಾವ ಮತ್ತು ಭಾಷೆಯಲ್ಲಿ ಸಹೃದಯ ಸಮನ್ವಯತೆ ಸಾಧಿಸಿರುವುದನ್ನು ಗುರುತಿಸಬಹುದು . ಕಸವರಮೆಂಬುದು ನೆರೆ ಸೈರಿಸಲಾರ್ಪೊಡೆ ಪರ ಧರ್ಮಮುಮಂ/ ಪರ ವಿಚಾರಮುಮಂ// ಒಂದೂವರೆ ಸಾವಿರ ವರ್ಷಗಳ ಹಿಂದೆಯೇ ಕವಿರಾಜಮಾರ್ಗಕಾರನು ಹೇಳಿದ ಪರರ ಧರ್ಮ ಮತ್ತು ಪರರ ವಿಚಾರಗಳನ್ನು ಗೌರವಿಸುವುದೇ, ಮನುಷ್ಯ ಪ್ರೀತಿಯ ನಿಜದ ನೆಲೆಯ ಸಂಪತ್ತು. ನೃಪತುಂಗ ನೆಲದ ಇಂತಹ ಬೀಜದಮಾತುಗಳು ಇಡೀ ದೇಶಕ್ಕೇ ಇವತ್ತು ಹೆಚ್ಚು ಹೆಚ್ಚು ಅನ್ವಯಿಸಿ ಅನುಷ್ಠಾನಕ್ಕೆ ಬರಬೇಕಾಗಿದೆ. ಆಗ ಅದನ್ನು ದುರಿತ ನಿವಾರಕ ಕಾಲವೆಂದು ಕರೆಯಬಹುದು. ಬುದ್ಧಧರ್ಮದ ‘ಸಾರ’ ಸಾರುವ ಅಶೋಕ ಚಕ್ರವರ್ತಿಯ ‘ದೇವನಾಂಪ್ರಿಯ’ ಕುರುಹು ದೊರಕಿದ ಸನ್ನತಿ, ಘಟಿಕಾಲಯಗಳ ನಾಗಾವಿ, ಬಸವ ಅಲ್ಲಮರ ವಚನ ಚಳವಳಿಯ ಶಕ್ತಿಕೇಂದ್ರ,  ಸಂತ ಕಥನದ ಗೇಸುದರಾಜ್ ಬಂದೇನವಾಜ್, ಗಾಣಗಾಪುರದ ದತ್ತಾವಧೂತ,  ಮಹಾದಾಸೋಹಿ ಶರಣಬಸವೇಶ್ವರ,  ತತ್ವಪದಗಳ ಹರಿಕಾರ ಕಡಕೋಳ ಮಡಿವಾಳಪ್ಪ ಮತ್ತು ಅವರ ಅನೇಕ ಮಂದಿ ತತ್ವಪದಕಾರ ಶಿಸುಮಕ್ಕಳು, ಊರೂರಿಗೂ ದೊರಕುವರು.   ಇಂತಹ ನೂರಾರು ಮಂದಿ ಹಿಂದೂ ಮುಸ್ಲಿಂ ಸೂಫಿ ಸಂತರು ಬಾಳಿ ಬದುಕಿದ ಕಲ್ಯಾಣ ಕರ್ನಾಟಕವು ಕನ್ನಡ ಸಂಸ್ಕೃತಿ ಮತ್ತು  ಸೌಹಾರ್ದತೆಯ ಸಾಕ್ಷಿಪ್ರಜ್ಞೆಯೇ ಆಗಿದೆ. ಇವತ್ತಿಗೂ ಸಾವಳಗಿಯ ಶಿವಲಿಂಗೇಶ್ವರ ಜಾತ್ರೆಯಲ್ಲಿ ಗದ್ದುಗೆಗೆ ಮುಸ್ಲಿಂ ಧರ್ಮದ ಹಸಿರು ಗಲ್ಲೀಫದ ಗೌರವ ಸಲ್ಲುತ್ತದೆ. ಅಲ್ಲಿನ ಸ್ವಾಮೀಜಿಯವರು ಸುತ್ತುವ ರುಮಾಲು ಹಸಿರು. ಲಾಂಛನಕ್ಕೆ ಶರಣೆಂಬೆನೆಂಬ ಅಂತಃಕರಣದ ಅನುಭಾವ ಪರಂಪರೆ ಅದು. ಇಂದಿಗೂ ಕಲಬುರ್ಗಿಯ ಬಂದೇನವಾಜ ಉರುಸಿನಲ್ಲಿ, ನಿತ್ಯದ ದರ್ಗಾದ  ದರುಶನದಲ್ಲಿ ಸಹಸ್ರ ಸಹಸ್ರ ಸಂಖ್ಯೆಯ ಹಿಂದೂಗಳ ಸಕ್ಕರೆ ಲೋಬಾನದ ಅಕ್ಕರೆ. ಇದು ನಿಸರ್ಗ ಸುಭಗ ಕೋಮು ಸೌಹಾರ್ದತೆಯ ಕುರುಹು. ಆದರೆ ಇತ್ತೀಚೆಗೆ  ಕೆಲವು ಮತಾಂಧರಿಂದ ಚುನಾವಣಾ ರಾಜಕಾರಣದ ಕೊಳಕು ಹುನ್ನಾರಗಳು ಸೈತಾನ ನೃತ್ಯದ ದೆವ್ವಗಾಳಿಗಳಾಗಿ ರಕ್ಕಸತನದಿಂದ ಬೀಸುತ್ತಿರುತ್ತವೆ. ಶತಮಾನಗಳಿಂದ ಕೃಷ್ಣೆಯ ಒಂದು ದಡ ಹರಿದಾಸ ಸಾಹಿತ್ಯ, ಮತ್ತೊಂದು ದಡ ತತ್ವಪದ ಮತ್ತು ವಚನಗಳ  ಬಹುತ್ವದ ಜೀವತುಂಬಿ ಹರಿದಿದೆ. ” ಓಂ ಏಕ್ ಲಾಖ್ ಅಸ್ಸೀ ಹಜಾರ ಪಾಚೋಪೀರ್ ಮೌನ್ಧೀನ್ ” ತಿಂಥಣಿ ಮೋನಪ್ಪಯ್ಯನ  ಇಂಥ ನುಡಿಗಟ್ಟುಗಳು  ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹಿಡಿದ ನಿಲುಗನ್ನಡಿ. ಎಡ – ಬಲ ಪಂಥಗಳೆರಡರ ಅತಿರೇಕಗಳನ್ನು ಮೀರಿದ ಲೋಕಪಂಥದ ಬೆರಗಿನ ಬಯಲು ನಮ್ಮ ಕಲ್ಯಾಣ ಕರ್ನಾಟಕದ ನೆಲ. ಅಫಜಲಪುರ, ಆಳಂದ, ಜೇವರ್ಗಿ, ಶಹಾಪುರ ಹೀಗೆ ಕಲ್ಯಾಣ ಕರ್ನಾಟಕದ ಅನೇಕ ಭಾಗಗಳಲ್ಲಿ ಹಿಂದೂಗಳ ಮನೆದೇವರುಗಳೆಂದರೆ ಸೂಫಿ ಸಂತರು. ಕರ್ಜಗಿಯ ಸೈಫುಲ್ಲಾ ಮುಲ್ಕ ದರ್ಗಾ, ನೀಲೂರು ಮಹಬೂಬ ಸುಬಾನಿ ದರ್ಗಾ, ಹೈದ್ರಾ ದರ್ಗಾಗಳ ಸೂಫಿ ದೈವಗಳು ಬಹುಪಾಲು ಹಿಂದೂ ವೀರಶೈವ, ಲಿಂಗಾಯತರ ಪಾಲಿನ ಉಪಾಸನ ದೇವರುಗಳು. ಹಾಗೇನೇ ಅನೇಕ ಮಂದಿ ಮುಸಲ್ಮಾನರು ಎಲ್ಲ ಹಿಂದೂ ಹಬ್ಬಗಳನ್ನು ಆಚರಿಸುತ್ತಾರೆ. ಭಸ್ಮವಿಭೂತಿ ಧರಿಸುತ್ತಾರೆ. ಮೊಹರಮ್ ಹಬ್ಬಗಳಲ್ಲಿ ಫಕೀರರಾಗಿ ಬಹುಪಾಲು ಮುಸ್ಲಿಮೇತರರು ಅಲಾಯಿ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುತ್ತಾರೆ. ಹೀಗೆ ಭಾವೈಕ್ಯತೆಗೆ ಕಲ್ಯಾಣ ಕರ್ನಾಟಕ ಹೇಳಿ ಮಾಡಿಸಿದ ಹೆಸರು. ಒಂದೆರಡು ಜಿಲ್ಲೆಯಲ್ಲಿ ಹರಿದಾಡುವ ಕಾವೇರಿ ಸಮಗ್ರ ಕನ್ನಡನಾಡಿನ ಜೀವನದಿಯಾಗಿ ಅಲ್ಲಿನ ಸಿನೆಮಾಗಳಿಗೆ, ಸಾಹಿತಿಗಳಿಗೆ ಗೋಚರಿಸುತ್ತಾಳೆ. ಆದರೆ ನಮ್ಮಭಾಗದ ಆರೇಳು ಜಿಲ್ಲೆಗಳ ತುಂಬೆಲ್ಲ ತುಂಬಿ ತುಳುಕುವ, ಇಲ್ಲಿನ ಜನಜೀವನದ ಸಮಗ್ರ ಬದುಕನ್ನು ಸಮೃದ್ಧಗೊಳಿಸುವ ಕೃಷ್ಣೆ, ಭೀಮೆಯರು ಬೆಂಗಳೂರು ಕೇಂದ್ರಿತ ಸಾಂಸ್ಕೃತಿಕ ಲೋಕಕ್ಕೆ, ಸಿನೆಮಾ ಜಗತ್ತಿಗೆ ಇವು ಬರೀ ನದಿಗಳಾಗಿಯೇ ಗೋಚರ. ಈ ಬಗೆಯ ಸಾಂಸ್ಕೃತಿಕ ರಾಜಕಾರಣ ಕುರಿತು ತಲೆ ಕೆಡಿಸಿಕೊಳ್ಳದ ಮುಗ್ಧ ಮೊಗಲಾಯಿ ಮಂದಿ ನಮ್ಮವರು. ನಿಜವಾದ ರಾಜಕೀಯಪ್ರಜ್ಞೆ ಎಂಬುದರ ಅರಿವಿರದೇ ಥೇಟ್ ರಾಜಕೀಯ ಪಕ್ಷಗಳ ಕಾರ್ಯಕರ್ತರಂತೆ ಮಾತಾಡುವುದನ್ನೇ ರಾಜಕೀಯಪ್ರಜ್ಞೆ ಎಂದು ನಂಬಿರುವ ಹುಂಬತನ ನಮ್ಮವರದು. ಅತಿಯಾದ ಸಿಹಿ, ಅತಿಯಾದ ಖಾರಪ್ರಿಯರು ಇವರು. ಹೀಗೆ ಎರಡರಲ್ಲೂ  ಅತಿರೇಕಗಳು.  ಕೃಷ್ಣೆ ಮೈತುಂಬಿ ಹರಿದರೂ ಕಷ್ಟಗಳು ಬಗೆ ಹರಿಯಲಿಲ್ಲ. ಅಷ್ಟಕ್ಕೂ ಕೃಷ್ಣೆ ರೈತರ ಹೊಲಗಳಿಗಿಂತ ಕೆಲಸಗೇಡಿ ಹಳ್ಳ್ಳ ಕೊಳ್ಳಗಳಲ್ಲೇ ಹೆಚ್ಚು ಹರಿಯುತ್ತಿರುವಳು. CADA  ಎಂಬುದು ಈ ಭಾಗದಲ್ಲಿ ಕಿಲುಬು ಕಾಸಿನಷ್ಟು ಕೆಲಸ ಮಾಡಿಲ್ಲ.   ೩೭೧ ಜೆ ‘ಲಾಗೂ’ ಆದರೂ ನಮ್ಮ ಎಲ್ಲ ಸಂಕಟಗಳು ಹಾಗೇ ಇವೆ. ನಾವು ಹಕ್ಕಿನೊಡೆಯರಾಗಿ ಮೂಲ ಸೌಲಭ್ಯಗಳನ್ನು ಪಡೆಯದೇ ಬಡವಾದವರು. ಕನ್ನಡನಾಡಿಗೆ ಇಬ್ಬರು ಮುಖ್ಯಮಂತ್ರಿಗಳನ್ನು ಕೊಟ್ಟ ನಾವು ಹಿಂದುಳಿದವರಲ್ಲ, ಹಿಂದುಳಿಸಲ್ಪಟ್ಟವರು. ಎಲ್ಲಕ್ಕೂ ” ಜಾಂದೇ ಚೋಡೋ ” ಎಂದು ಉದಾಸೀನ ತೋರುವ ಅಸಡ್ಡೆ ಜಾಯಮಾನ ನಮ್ಮದು. ಜವಾರಿ ಮುಗ್ದತೆ ಉಳಿಸಿಕೊಂಡುದೇ ನಮ್ಮ ಹೆಗ್ಗಳಿಕೆ. ಕಲಬುರ್ಗಿ ಹೆಸರಿನೊಂದಿಗೆ ಅಂಟಿಕೊಂಡಿರುವುದು ಕೆಂಡದ ಬಿಸಿಲು ಮತ್ತು ತೊಗರಿ.  ಕಲಬುರ್ಗಿಯಲ್ಲಿ ಸರ್ಕಾರದ ಖರೀದಿಗಿಂತಲೂ ಭರ್ಜರಿಯಾಗಿ ಖಾಸಗಿ ಖರೀದಿದಾರರ  ಕಿಗ್ಗಳದ ರೇಟುಗಳಿಗೆ ರೈತರು ತೊಗರಿ ಮತ್ತು ಹತ್ತಿ ಮಾರುವಂತಾಗಿದೆ. ಸರಕಾರ ಎಂಬುದರ ದರಕಾರವಿಲ್ಲದೇ ಹೆದ್ದಾರಿಗಳ  ಬಾಜೂಕೆ ರಾಜಾರೋಷವಾಗಿ ಖಾಸಗಿ ಸಾಹುಕಾರರು  ತಕ್ಕಡಿ ಕಲ್ಲುಗಳನ್ನಿಟ್ಟುಕೊಂಡು ಮುಗ್ದರೈತರು ಬೆಳೆದ ಹತ್ತಿ, ತೊಗರಿ, ಇತರೆ ಫಸಲುಗಳನ್ನು ಕಾಟಾ ಖರೀದಿ ಮಾಡುವ ಕಾಳದಂಧೆ ಯಾವೊಂದು ಎಗ್ಗಿಲ್ಲದೇ ಜಗ್ಗಿ ಪ್ರಮಾಣದಲ್ಲೇ ಜರುಗುತ್ತಲಿರುತ್ತವೆ. ಅದೇ ರಸ್ತೆಗಳಲ್ಲಿ ಮಂತ್ರಿ, ಎಮ್ಮೆಲ್ಲೆ, ಎಂಪಿ, ಇತರೆ ರಾಜಕಾರಣಿಗಳು ಅದನ್ನು ನೋಡುತ್ತಲೇ ಓಡಾಡುತ್ತಾರೆ. ರೈತರನ್ನು ಲೂಟಿ ಮಾಡುವ ಈ ಹಗಲು ದರೋಡೆಕೋರ ದಂಡನ್ನು ಇದುವರೆಗೂ ಯಾವೊಬ್ಬ ತೀಸ್ಮರ್ಕ ರಾಜಕಾರಣಿ ತಡವಿಕೊಂಡ ನಿದರ್ಶನವಿಲ್ಲ. ಇಂತಹ ಹತ್ತು ಹಲವು ಶೋಷಣೆಗಳ ಬಲಿಪಶುಗಳಾಗಿರುವ ನಮ್ಮವರನ್ನು ಹೆಸರಲ್ಲಿ ಮಾತ್ರ ಕಲ್ಯಾಣ ಗೊಳಿಸಿದ್ದಾಗಿದೆ.  ಹೈದ್ರಾಬಾದ್ ಕರ್ನಾಟಕ ಹೆಸರಲ್ಲಷ್ಟೇ ಬದಲಾದರೆ ಸಾಕೇ.? ಖರೇ ಖರೇ ಕಲ್ಯಾಣ ಕರ್ನಾಟಕ ಆಗೋದು ಯಾವಾಗ ***********************************************   

ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ Read Post »

ಇತರೆ

ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..!

ಲೇಖನ ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..! ಮಹಿಳೆಯೊಬ್ಬರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಬೇಕು ಎಂಬ ಚರ್ಚೆಗೆ ಜೀವ ಬಂದಿದೆ. ಶತಮಾನ ಪೂರೈಸಿರುವ ಈ ಸಂಸ್ಥೆಯು ಇದುವರೆಗೆ ಮಹಿಳಾ ಅಧ್ಯಕ್ಷರನ್ನು ಕಂಡಿಲ್ಲ. ಅಧಿಕಾರ-ಹಣ-ವರ್ಚಸ್ಸು ಇರುವ ಕ.ಸಾ.ಪ,ದಲ್ಲಿ ಚುನಾವಣೆಯ ಬಲಾಬಲ ಪರೀಕ್ಷೆಯಲ್ಲಿ ಮಹಿಳೆಯರು ಕಾಣಿಸಿಕೊಳ್ಳಬಹುದೇ? ಅಂತಹ ಅವಕಾಶವನ್ನು ’ಮತ’ ಚಲಾಯಿಸುವ ಸದಸ್ಯರು ಒಪ್ಪಿಕೊಳ್ಳುವರೇ? ಎಂದು ಕೇಳಿರುವ ಪತ್ರಕರ್ತವೊಬ್ಬರು ಚರ್ಚೆಯನ್ನು ಆರಂಭಿಸಿದ್ದಾರೆ. ನೂರೈದು ವರ್ಷ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತು ಕಳೆದ ಕೆಲ ವರುಷಗಳಿಂದ ಒಳ್ಳೆಯ ಕಾರಣಕ್ಕಾಗಿ ಸುದ್ದಿಯಾದದ್ದು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ. ’ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ’ ಎಂದು ಗುರುತಿಸಲಾಗುವ ಈ ಸಂಸ್ಥೆ ಹಾಗೆ ನಡೆದು ಕೊಂಡದ್ದು ಮಾತ್ರ ಅಪರೂಪದಲ್ಲಿ ಅಪರೂಪ. ಚಾರಿತ್ರಿಕ ಮಹತ್ವದ ಈ ಸಂಸ್ಥೆಯ ಆಡಳಿತ ಚುಕ್ಕಾಣಿ ಹಿಡಿದವರು ಇತ್ತೀಚಿನ ದಿನಗಳಲ್ಲಿ ಅದರ ಘನತೆಗೆ ತಕ್ಕಂತೆ ವರ್ತಿಸದೇ ಇರುವದಕ್ಕೂ ಸಾಕ್ಷಿಯಾಯಿತು. ಜಾತಿ ರಾಜಕಾರಣ, ಸ್ವಜನ ಪಕ್ಷಪಾತ, ಅಧಿಕಾರ ಲೋಲುಪತೆ ಸೇರಿದಂತೆ ಸಕ್ರಿಯರಾಗಿ ರಾಜಕಾರಣದ ಎಲ್ಲ ರೋಗಗಳನ್ನೂ ಹೊಂದಿದೆ. ನಿಂತ ನೀರಾಗಿರುವುದರ ಜೊತೆಗೆ ಮಲೆತು ವಾಸನೆ ಬರುವ ಹಂತ ತಲುಪಿರುವ ಸಾಹಿತ್ಯ ಪರಿಷತ್ತು ಕಾಯಕಲ್ಪಕ್ಕಾಗಿ ಕಾಯುತ್ತ ನಿಂತಿದೆ. ಅಧಿಕಾರ-ಹಣಗಳೆರಡೂ ಒಂದೆಡೆಯೇ ಸೇರಿದ ಮೇಲೆ ಅದರ ಜೊತೆಗೆ ರಾಜಕಾರಣ ಕೂಡ ಸಹಜವಾಗಿಯೇ ಬಂದು ನಿಲ್ಲುತ್ತವೆ. ತೋಳ್ಬಲ-ಸಂಖ್ಯಾಬಲಗಳೇ ಬಹುಮುಖ್ಯವಾದ ಮೇಲೆ ಆ ಮೂಲಕ ಆಯ್ಕೆಯಾಗಿ ಬಂದವರಿಂದ ಶಿಸ್ತು, ಸೌಜನ್ಯ, ಮೌಲ್ಯ, ಪ್ರಾಮಾಣಿಕತೆ ನಿರೀಕ್ಷಿಸುವುದು ದುರಾಸೆಯಾದೀತು. ಇಂತಿಪ್ಪ ಈ ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ಕುಳಿತವರು ಮೂರನ್ನೂ ಬಿಡದೇ ಇದ್ದಿದ್ದರೆ ಈ ಹಿಂದೆ ಚುನಾವಣೆ ನಡೆದು ಎರಡು ವರ್ಷ ಕಳೆಯಬೇಕಿತ್ತು. ಸಾಹಿತ್ಯಲೋಕದ ಒಬ್ಬ ಪ್ರತಿನಿಧಿಯಂತೆ ವರ್ತಿಸದೇ ದುರಾಸೆಯಿಂದ ಬೈಲಾ ತಿದ್ದುಪಡಿ ಅದನ್ನು ತನ್ನ ಅವಧಿಗೇ ಅಳವಡಿಸಿಕೊಂಡು-ವಿಸ್ತರಿಸಿಕೊಂಡ ನಾಚಿಕೆಗೇಡಿನ ಸಂಗತಿಗೂ ಕಸಾಪ ಸಾಕ್ಷಿಯಾಯಿತು. ಸಾಹಿತ್ಯ ಪರಿಷತ್ತಿಗೆ ’ಕಪ್ಪುಚುಕ್ಕೆ’ ಬಳಿಯಲೂ ಕಾರಣವಾಯಿತು. ಈ ಹಿಂದೆಯೂ ಬೈಲಾ ತಿದ್ದುಪಡಿಯ ಚರ್ಚೆ ನಡೆದಿತ್ತು. ಆದರೆ ಅದಕ್ಕೆ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು. ಆಗ ಅಧ್ಯಕ್ಷರಾಗಿದ್ದವರು ಮೂರನ್ನೂ ಬಿಡುವಷ್ಟು ಧೈರ್ಯವಂತರಾಗಿರಲಿಲ್ಲ. ಕನಿಷ್ಠ ಮಟ್ಟದ ಸ್ವಪ್ರಜ್ಞೆಯ ಜೊತೆಗೆ ಪರಿಷತ್ತಿನ ಘನತೆಯೂ ಅವರನ್ನು ತಮಗೆ ಬೇಕಾದಂತೆ ಮಾಡದೇ ಇರುವಂತೆ ತಡೆದಿತ್ತು. ಜೀವ ವಿರೋಧಿ- ಜನವಿರೋಧಿ ನಡೆ ನಡೆದುಕೊಳ್ಳಲೂ ಹಿಂದೇಟು ಹಾಕದ ಸ್ಥಿತಿಗೆ ಸಾಹಿತ್ಯ ಪರಿಷತ್ತು ತಲುಪಿದೆ. ಅದು ನಡೆಸುವ ವಾರ್ಷಿಕ ಕ್ರಿಯಾವಿಧಿಯ ಸಾಹಿತ್ಯ ಸಮ್ಮೇಳನದಲ್ಲಿಯೇ ಪರಿಷತ್ತಿನ ಅಧ್ಯಕ್ಷರ ನಡವಳಿಕೆ ಬಗ್ಗೆ ಬಹಿರಂಗ ಪ್ರತಿರೋಧವೂ ವ್ಯಕ್ತವಾಯಿತು. ತೋಯ್ದ ಮುಖ ನನ್ನದಲ್ಲ ಎಂದು ಒರೆಸಿಕೊಂಡದ್ದನ್ನೂ ಕನ್ನಡ ಜನತೆ ನೋಡಬೇಕಾಯಿತು. ಇಂತಹ ಘನ ಇತಿಹಾಸ-ಪರಂಪರೆ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹಿಳೆಯೊಬ್ಬರು ಅಧ್ಯಕ್ಷರಾದರೆ? ಎಂಬ ಪ್ರಶ್ನೆ ತೇಲಿಬಂದಿತು ಆಗಲೇ. ತೇಲಿ ಬಂದ ಮಾತು ಚರ್ಚೆ- ಸಂವಾದಕ್ಕೂ ಕಾರಣವಾಗಿಯಿತು. ಅಪರೂಪಕ್ಕೆ ಪರಿಷತ್ತು ಧನಾತ್ಮಕ ಕಾರಣಕ್ಕಾಗಿ ಚರ್ಚೆಗೆ ಒಳಗಾಗಿದೆ. ಅಥವಾ ಪರಿಷತ್ತಿನ ಬಗ್ಗೆ ಕಾಳಜಿ ಇರುವವರು ಧನಾತ್ಮಕ ನೆಲೆಯಲ್ಲಿ ಚರ್ಚೆ ಹುಟ್ಟು ಹಾಕಿದ್ದಾರೆ. ಅದರ ಫಲ-ಫಲಿತ ಧನಾತ್ಮಕವಾಗಿಯೇ ಇರಬೇಕು ಎಂದೇನಿಲ್ಲ. ಅಲ್ಲವೇ? ಸಾಹಿತ್ಯ ಪರಿಷತ್ತು ಘನತೆಯಿಂದ ವರ್ತಿಸಿದ್ದನ್ನೂ ನೋಡಿ ದೀರ್ಘ ಕಾಲವಾಗಿದೆ. 1905 ರಲ್ಲಿ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿ ವರ್ಷ ವಾರ್ಷಿಕ ಸಮ್ಮೇಳನ ನಡೆಸುವ ಪರಿಪಾಠ ಇಟ್ಟುಕೊಂಡಿದೆ. ಆರಂಭದ ದಿನಗಳಲ್ಲಿ ಪರಿಷತ್ತಿನ ಅಧ್ಯಕ್ಷರೇ ಸಮ್ಮೇಳನದ ಅಧ್ಯಕ್ಷತೆಯನ್ನೂ ವಹಿಸುತ್ತಿದ್ದರು. ಕೆಲವರ್ಷಗಳ ನಂತರ ಈ ಪರಿಪಾಠ ಬದಲಾಯಿಸಿ, ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಸಾಹಿತಿ-ಲೇಖಕರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡುವ ಪ್ರಕ್ರಿಯೆ ಜಾರಿಗೆ ಬಂತು. ಕಳೆದ ನೂರೈದು ವರ್ಷಗಳಲ್ಲಿ ಸಾಹಿತ್ಯ ಪರಿಷತ್ತು ಇದುವರೆಗೆ 85 ರ ಮೇಲೆ ಸಮ್ಮೇಳನಗಳನ್ನು ನಡೆಸಿದೆ. ಮತ್ತು ನಡೆಸುತ್ತದೆ. ಈ ಸಮ್ಮೇಳನ ಅಧ್ಯಕ್ಷರ ಪಟ್ಟಿ ಮೇಲೆ ಕಣ್ಣು ಹಾಯಿಸಿದರೆ ಪರಿಷತ್ತಿನ ಪುರುಷ ಪ್ರಧಾನ ’ಮ್ಯಾಚೋ’ ಗುಣ ಢಾಳಾಗಿ ಎದ್ದು ಕಾಣುತ್ತದೆ. ಅಪರೂಪಕ್ಕೆ ಆಗಾಗ ಅಂದರೆ ಬೆರಳೆಣಿಕೆಗಿಂತ ಕಡಿಮೆ ಸಲ ಪರಿಷತ್ತು ತನ್ನದೇ ರೂಢಿಯನ್ನು ಮುರಿಯುವ ಧೈರ್ಯವನ್ನೂ ಮಾಡಿದೆ. ಉತ್ತರದ ಗಡಿಭಾಗದಲ್ಲಿ ಕನ್ನಡದ ಕೆಲಸ ಮಾಡಿದ ಲೇಖಕಿ, ಕನ್ನಡಕ್ಕಾಗಿ ಸಿಂಹಿಣಿಯಂತೆ ಹೋರಾಟ ಮಾಡುತ್ತಿದ್ದ ಜಯದೇವಿ ತಾಯಿ ಲಿಗಾಡೆ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತ್ತು. ಅಪ್ಪಟ ಕನ್ನಡದ ನೆಲ ಸಿದ್ಧರಾಮನ ಸೊನ್ನಲಿಗೆಯವರಾದ ತಾಯಿ ಲಿಗಾಡೆ ಅವರು ಏಕೀಕರಣ ಮತ್ತು ನಂತರದ ದಿನಗಳಲ್ಲಿ ನಡೆದ ಹೋರಾಟಗಳಲ್ಲಿ ಸಕ್ರಿಯರಾಗಿದ್ದವರು. ತಾಯಿಯ ಪದಗಳು, ಸಿದ್ಧರಾಮ ಪುರಾಣದಂತಹ ಗಮನಾರ್ಹ ಕೃತಿ ರಚಿಸಿದ ಜಯದೇವಿ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವಕ್ಕೆ ಪಾತ್ರರಾಗಿದ್ದರು. ಮಂಡ್ಯದಲ್ಲಿ (1972) ದಲ್ಲಿ ನಡೆದ 48 ನೇ ಸಾಹಿತ್ಯ ಸಮ್ಮೇಳನಕ್ಕೆ ಜಯದೇವಿ ತಾಯಿ ಲಿಗಾಡೆ ಅವರು ಅಧ್ಯಕ್ಷರಾಗಿದ್ದರು. ಅದಾದ ಮೇಲೆ ಮತ್ತೊಮ್ಮೆ ಮಹಿಳೆಯೊಬ್ಬರಿಗೆ ಸಮ್ಮೇಳನದ ಅಧ್ಯಕ್ಷತೆಯ ಗೌರವ ದೊರೆತದ್ದು 1999 ರಲ್ಲಿ. ಬಾಗಲಕೋಟೆಯಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಗೆ ಹಿರಿಯ ಲೇಖಕಿ ಶಾಂತಾದೇವಿ ಮಾಳವಾಡ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಾದ ಮೇಲೆ 2003 ರಲ್ಲಿ ಮೂಡಬಿದರೆಯಲ್ಲಿ ನಡೆದ 71ನೇ ಸಾಹಿತ್ಯ ಸಮ್ಮೇಳನಕ್ಕೆ ಡಾ.ಕಮಲಾ ಹಂಪನಾ ಆಯ್ಕೆಯಾಗಿದ್ದರು. ಅದಲ್ಲದೇ ಗದಗದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷೆಯನ್ನಾಗಿ ಗೀತಾ ನಾಗಭೂಷಣ ಆಯ್ಕೆಯಾಗಿದ್ದರು. ಈ ನಾಲ್ಕು ಅಪರೂಪದ ಅಪವಾದಗಳನ್ನು ಹೊರತು ಪಡಿಸಿದರೆ ಪರಿಷತ್ತು ಅಂದರೆ ಅದರ ಅಧಿಕಾರದ ಚುಕ್ಕಾಣಿ ಹಿಡಿದವರು-ಪದಾಧಿಕಾರಿಗಳು ಅರ್ಧದಷ್ಟು ಕನ್ನಡಿಗರಿರುವ ಮಹಿಳೆಯರನ್ನು ಗಂಭೀರವಾಗಿ ಪರಿಗಣಿಸಿದ್ದೇ ಇಲ್ಲ. ಹಾಗೆಂದರೆ ಅದು ಪೂರ್ಣ ಸತ್ಯ ಅಲ್ಲ ಎಂದು ವಾದಿಸಬಹುದು. ಕಾರ್ಯಕಾರಿ ಮಂಡಳಿಯಲ್ಲಿ ’ಮಹಿಳಾ ಪ್ರತಿನಿಧಿ’ಯ ನೇಮಕ ಮತ್ತು ಮಹಿಳಾ ಸಾಹಿತ್ಯದ ಕುರಿತ ಚರ್ಚೆ-ಸಂವಾದ-ಗೋಷ್ಠಿ ನಡೆಸುವ ಔದಾರ್ಯವನ್ನು ಪರಿಷತ್ತು ತೋರಿಸುತ್ತಲೇ ಬಂದಿಲ್ಲ. ಇಂತಹ ಪುರುಷ ಪ್ರಧಾನ, ಯಜಮಾನಿಕೆಯನ್ನು ಹೊಂದಿರುವ ಕನ್ನಡದ- ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯ ಚುಕ್ಕಾಣಿ ಮಹಿಳೆಯೊಬ್ಬರಿಗೆ ಯಾಕೆ ಸಿಗಬಾರದು? ಎಂಬ ಪ್ರಶ್ನೆ ಸಕಾರಣ ಮತ್ತು ಸಕಾಲಿಕ. ಆದರೆ, ಪ್ರಶ್ನೆ ಇರುವಷ್ಟು ಸುಲಭವಾಗಿ ಉತ್ತರ ಇರುವುದಿಲ್ಲ. ಉತ್ತರ-ದಕ್ಷಿಣ, ಪ್ರಬಲ ಸಮುದಾಯಗಳ ಹಿಡಿತದಲ್ಲಿ ಇರುವ ಹಣ ಮತ್ತು ಅಧಿಕಾರ ಇರುವ ಈ ಸ್ಥಾನ ಮಹಿಳೆಗೆ ಸಿಗಬಹುದೇ? ಎಂದು ಯೋಚಿಸಿದರೆ ’ಬೆಳಕಿನ ಕಿರಣ’ ಪರಿಷತ್ತಿನ ಸುತ್ತೆಲ್ಲೂ ಕಾಣಿಸುವುದಿಲ್ಲ. ಒಂದು ಲಕ್ಷಕ್ಕೂ ಹೆಚ್ಚು ಜನ ಸದಸ್ಯರನ್ನು ಹೊಂದಿರುವ ಪರಿಷತ್ತು ಚುನಾವಣಾ ರಾಜಕಾರಣದ ಅಖಾಡವಾಗಿದೆ. ತೋಳ್ಬಲ-ಧನಬಲ-ಜಾತಿಬಲ ಇಲ್ಲದವರಾರೂ ಪರಿಷತ್ತಿನ ಸುತ್ತ ಸುಳಿಯುವ ಹಾಗಿಲ್ಲ. ಅಧ್ಯಕ್ಷರಾಗಲು ಅರ್ಹ ಮಹಿಳೆಯರಿಲ್ಲವೇ? ಈಗ ಪರಿಷತ್ತಿನ ಅಧ್ಯಕ್ಷರಾಗಲು ಬೇಕಿರುವುದು ಸಾಹಿತ್ಯ ರಚನೆ, ಸಾಹಿತ್ಯದ ಒಡನಾಟ, ಸಾಹಿತ್ಯಾಸಕ್ತಿ, ಆಡಳಿತದ ಅನುಭವ ಯಾವುದೂ ಮುಖ್ಯವಲ್ಲ. ಇಂತಿಪ್ಪ ಸಕಾರಣ ಕಾರಣಗಳ ಅಗತ್ಯವೇ ಇಲ್ಲದ ಅಧ್ಯಕ್ಷ ಹುದ್ದೆಯು ಮಹಿಳೆಯರಿಗೆ ಪೈಪೋಟಿಯಾಚೆಗಿನ ಸಂಗತಿ ಎಂಬಂತೆ ಗೋಚರವಾಗುತ್ತಿದೆ. ಮಹಿಳೆಯರಿಗೆ ಅಧಿಕಾರ ’ನೀಡುವ’? ಔದಾರ್ಯ ಪರಿಷತ್ತಿನ ಸದಸ್ಯರು ತೋರಬಹುದೇ? ಚುನಾವಣೆಯಲ್ಲಿ ಇಬ್ಬರು ಮಹಿಳೆಯರು ನಿಂತರೆ ಅಥವಾ ಅವಿರೋಧ ಆಯ್ಕೆಯಾದರೆ ಮಾತ್ರ ಪರಿಷತ್ತು ಮಹಿಳಾ ಅಧ್ಯಕ್ಷೆಯನ್ನು ಕಾಣಬಹುದು. ಅದಿಲ್ಲದಿದ್ದರೆ ತೋಳ್ಬಲದ ಪೈಪೋಟಿಗೆ ಇಳಿದು ಮಹಿಳೆಯೊಬ್ಬರು ಅಧ್ಯಕ್ಷರಾಗುವುದು ಕಷ್ಟಸಾಧ್ಯದ ಸಂಗತಿ ಎಂದೇ ತೋರುತ್ತದೆ. ಈಗಿನ ದಿನಮಾನದಲ್ಲಿ ಚುನಾವಣೆ ನಡೆಯುವ ಹುದ್ದೆಗಳಿಗೆ ಅವಿರೋಧ ಆಯ್ಕೆ ನಿರೀಕ್ಷಿಸುವುದು ಅಸಾಧ್ಯವಾದ ಸಂಗತಿ. ಹೀಗಿರುವಾಗ ಉಳಿಯುವ ಒಂದೇ ಆಯ್ಕೆ ಎಂದರೆ ಇಬ್ಬರು ಮಹಿಳೆಯರನ್ನು ಚುನಾವಣೆಯ ಕಣಕ್ಕೆ ಇಳಿಸುವುದು ಅಥವಾ ಮಹಿಳೆಯರಿಬ್ಬರು ಚುನಾವಣೆಗೆ ಸ್ಪರ್ಧಿಸುವುದು. ಸಾರ್ವಜನಿಕ ಹುದ್ದೆಗಳಲ್ಲಿ ಅಂದರೆ ಅಧಿಕಾರ ನಡೆಸಿದ ಅನುಭವ, ಸಾಹಿತ್ಯದ ಆಸಕ್ತಿ, ಬರವಣಿಗೆಯಲ್ಲಿ ಆಸಕ್ತಿ ಇರುವ ಕೆಲವು ಮಹಿಳೆಯರು ಪರಿಷತ್ತಿನ ಅಧ್ಯಕ್ಷತೆ ವಹಿಸುವುದು ಸೂಕ್ತ ಎಂಬ ಅಭಿಪ್ರಾಯ ನನ್ನದು. ಹಿರಿಯ ಕಾದಂಬರಿಕಾರ್ತಿ-ಲೇಖಕಿ ವೀಣಾ ಶಾಂತೇಶ್ವರ ಅವರು ಧಾರವಾಡದ ಕರ್ನಾಟಕ ಕಾಲೇಜಿನ ಪ್ರಾಂಶುಪಾಲರಾಗಿದ್ದವರು. ಇಂಗ್ಲಿಷ್‌ ಸಾಹಿತ್ಯದ ಅಧ್ಯಾಪಕಿಯಾಗಿದ್ದ ವೀಣಾ ಶಾಂತೇಶ್ವರ ಅವರು ಕನ್ನಡದಲ್ಲಿ ಗಮನಾರ್ಹ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ವೀಣಾ ಶಾಂತೇಶ್ವರ ಅವರ ಅಧ್ಯಕ್ಷರಾದರೆ ತಪ್ಪೇನು? ಸ್ವದೇಶಿ ಹೆಲಿಕ್ಯಾಪ್ಟರ್‌ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ವಿಜ್ಞಾನ ಲೇಖಕಿ-ಕತೆಗಾರ್ತಿ ನೇಮಿಚಂದ್ರ, ಕನ್ನಡ ಪತ್ರಿಕೋದ್ಯಮದಲ್ಲಿ ನಾಲ್ಕು ದಶಕಗಳ ಕಾರ್ಯನಿರ್ವಹಿಸಿದ, ಪತ್ರಿಕೆಯೊಂದರ ಸಂಪಾದಕರೂ ಆಗಿದ್ದ ಆರ್‌.ಪೂರ್ಣಿಮಾ, ಮಾತು-ಚಟುವಟಿಕೆ ಹಾಗೂ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೆ.ನೀಲಾ, ತಮ್ಮ ಸೊಗಸಾದ ಕವಿತೆಗಳ ಮೂಲಕ ಗಮನ ಸೆಳೆದಿರುವ ಸವಿತಾ.ನಾಗಭೂಷಣ, ವಿಮರ್ಶಕಿಯಾಗಿ ಚಿರಪರಿಚಿತರಿರುವ ಎಂ.ಎಸ್‌.ಆಶಾದೇವಿ… ಹೀಗೆಯೇ ಪಟ್ಟಿಯನ್ನು ಬೆಳೆಸಬಹುದು. ಪರಿಷತ್ತಿನ ಚುನಾವಣೆಯು ಇಂತಹ ’ಹೊಸ’ ಆಲೋಚನೆಗೆ ಇಂಬು ನೀಡುವಷ್ಟು ಪ್ರಗತಿಪರವಾಗಿದೆಯೇ ಎಂಬ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ. ಮತ್ತು ನೀಡಬೇಕು..! ************************************* ಕೆ.ಶಿವು.ಲಕ್ಕಣ್ಣವರ

ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..! Read Post »

ಇತರೆ, ಲಹರಿ

ಏಕೀ ಏಕತಾನತೆ

ಲಹರಿ ಏಕೀ ಏಕತಾನತೆ ಸ್ಮಿತಾ ಭಟ್ ಅಮ್ಮಾ ನಿಂಗೆ ಇತ್ತೀಚಿಗೆ ಫಲಾವ್ ಮಾಡೋಕೆ ಬರಲ್ಲ ಎಂದು ಊಟಕ್ಕೆ ಕುಳಿತವ ಅಸಾಧ್ಯವಾದ ಅಸಮಾಧಾನ ತೋರಿಸಿ ಎರಡು ತುತ್ತು ತಿಂದ ಶಾಸ್ತ್ರ ಮಾಡಿ ಗೊಣಗುತ್ತಾ ಎದ್ದು ಹೊರಟೇ ಹೋದ. ನನಗೋ ಅಳುವೇ ತುಟಿಗೆ ಬಂದ ಅನುಭವ. ಮಾತು ಮಾತಿಗೂ ಅಮ್ಮನ ಫಲಾವ್ ಅಂದ್ರೆ ಅದೆಷ್ಟು ರುಚಿ, ಯಾರಿಗೂ ಈತರ ಮಾಡೋಕೆ ಬರಲ್ಲ ಎಂದು ಯಾರದ್ದಾದರೂ ಮನೆಯಲ್ಲಿ, ಹೋಟೆಲ್‌ ಗಳಲ್ಲಿ , ತಿಂದು ಬಂದಾಗೆಲ್ಲ ಪಲಾವ್ ನ ಗುಣ ಸ್ವಭಾವ ದೂರುತ್ತ ನನಗೆ ಕೊಟ್ಟ ಸರ್ಟಿಫಿಕೇಟ್ ನ ಲೆಕ್ಕವೇ ಇಲ್ಲ. ಇದೇನು ಇದ್ದಕ್ಕಿದ್ದಂತೆ ಈ ಪರಿ ಬದಲಾವಣೆ!? ನಿರಿಕ್ಷೆಗೂ ಮೀರಿದ ಪ್ರತಿಕ್ರಿಯೆ ಅಡುಗೆಯೆಂಬ ಅರಮನೆಯಲ್ಲಿ ನನ್ನ ಜಂಗಾಬಲವೇ ಉಡುಗಿಹೋಗಿತ್ತು. ಎದ್ದು ಹೊರಟವನ ಹಿಂದಿಂದೇ ಹೋಗಿ ಯಾಕೋ ಏನಾಯ್ತು ಹೇಳು. ಮತ್ತೆ ಇಷ್ಟು ದಿನ ಬಾಯಿ ಚಪ್ಪರಿಸಿ ಚಪ್ಪರಿಸಿ ತಿಂತಾ ಇದ್ದೆ ಈಗೆನಾಯ್ತು ಅಂತದ್ದು. ಸೋತ ಭಾವದೊಳಗೆ ಅವನ ಪರಿ ಪರಿಯಾಗಿ ಕೇಳುತ್ತಿದ್ದೆ. ಅದು ಆವಾಗ ಆಗಿತ್ತು,ಈಗ ಅಲ್ಲ. ಈಗಂತೂ ನಿನ್ನ ಫಲಾವ್ ಯಾಕೋ ಮೊದಲಿನ ರುಚಿ ಬರೋದೇ ಇಲ್ಲ. ಮರೆತೇ ಹೋಗಿದೆ ಅಮ್ಮಾ ನಿಂಗೆ ಆವತ್ತಿನ ರುಚಿ ಎನ್ನುತ್ತ, ಯಾವ ಪ್ರತಿಕ್ರಿಯೆಗೂ ಕಾಯದೇ ಹೊರಟೇ ಹೋಗಿದ್ದ. ಮನೆಯ ಎಲ್ಲ ಸದಸ್ಯರಿಂದ ಇಂತಹದ್ದೊಂದು ತಕರಾರು ಸದಾ ಸ್ವೀಕರಿಸುವ ನನಗೆ,ರೂಡಿಯಾದ ವಿಚಾರವೇ ಆದರೂ ಮಗನಿಂದ ಬಂದ ಪ್ರತಿಕ್ರಿಯೆಗೆ ಬೆರಗಾಗಿದ್ದೆ. ಮತ್ತದರ ನಿರೀಕ್ಷೆಯೂ ಇರಲಿಲ್ಲ. ಇಲ್ಲ ಕಣೋ ಬಹಳ ದಿನದಿಂದ ಒಂದೇ ತೆರನಾದ ರುಚಿ, ಕೈ ಅಡುಗೆ ತಿಂತಾ ಇದ್ದೀಯಲ್ಲ.ಅದೂ ಅಲ್ಲದೇ ನಿತ್ಯ ಫಲಾವ್ ಬೇಕು ಅಂತೀಯಲ್ಲ,ಅದಕ್ಕೆ ನಿನಗೆ ಬೇಜಾರು ಬಂದಿದೆ. ಎಂದು ವಾಸ್ತವದ ಅರಿವು ಮೂಡಿಸಲು ಪ್ರಯತ್ನಿಸುತ್ತಿದ್ದೆ. ಇರಬಹುದು ಬಿಡು ಅಮ್ಮಾ,, ಆದ್ರೂ ನೀನ್ಯಾಕೆ ಮೊದಲಿನಂತೆ ಅಡುಗೆ ಮಾಡೋದಿಲ್ಲ ಈಗ, ಎನ್ನುತ್ತಲೇ ಎದ್ದು ನಡೆದಿದ್ದ. ಅಡುಗೆ ಮನೆಗೆ ಎಂಟ್ರಿ ಕೊಡುತ್ತಿದ್ದಂತೆ ಬೇಸಿನ್ ಒಳಗೆ ಇದ್ದ ಪಾತ್ರೆಗಳು. ಅಲ್ಲಲ್ಲೇ ತಿಂದು ಎದ್ದು ಹೋದ ತಟ್ಟೆಗಳು. ಒರೆಸಿ ಇಡಬೇಕಾದ ಪಿಂಗಾಣಿಗಳು. ಪಿಲ್ಟರ್ ಕೆಳಗೆ ಚೆಲ್ಲಿದ ನೀರು. ತುಂಬಿಟ್ಟ ತರಕಾರಿಳ ದಂಡು. ಜಾಗ ತಪ್ಪಿದ ಡಬ್ಬಿಗಳು. ಮಾಡಬೇಕಾದ ನಿತ್ಯದ ಏಕತಾನತೆಯ ನೋವನ್ನು ನೆನಪಿಸುತ್ತಿತ್ತು. ಸ್ವಲ್ಪ ಯೋಚಿಸಿ ಊಟ ಮಾಡುವವರಿಗೇ ಏಕತಾನತೆ ಕಾಡುವಾಗ ಅಡುಗೆ ಮಾಡುವರಿಗೆ ಇನ್ನೆಂತ ಏಕತಾನತೆ ಕಾಡುತ್ತದೆ ಎಂದು. ಕೇವಲ ಊಟ, ಅಡುಗೆ ವಿಷಯ ಮಾತ್ರವಲ್ಲ, ಪ್ರತೀ ಕೆಲಸದಲ್ಲೂ ಅಷ್ಟೇ ಮಾಡುವ ಕಷ್ಟ ಆಡುವವನಿಗೆ ಎಂದೂ ಅರ್ಥವಾಗುವದಿಲ್ಲ. ಅದಕ್ಕೇ ಹೇಳೋದು ಮಾತೊಗೆದು ಹೋಗುವಾಗಿನ ಅಹಂಕಾರ ಮೈ ಮುರಿದ ದುಡಿಯುವಾಗ ಇರೋದಿಲ್ಲ ಎಂದು. ಈಗ ಐದಾರು ತಿಂಗಳಿನಿಂದ ಕರೋನಾ ಕಾರಣದಿಂದಾಗಿ, ಕಾಲ ಎಲ್ಲರನ್ನೂ ಬದಿಗೆ ಸರಿಸಿ ತಾನು ಮಾತ್ರ ಓಡುತ್ತಿದೆಯೇ ಅನ್ನಿಸುತ್ತಿದೆ. ಅದೆಷ್ಟೋ ಜನರ ಮನದೊಳಗೆ ಏಕತಾನತೆ ರೇಜಿಗೆ ಹುಟ್ಟಿಸುವಷ್ಟು ಹರಡಿಕೊಂಡಿದೆ. ತಲೆ ತಲಾಂತರಗಳಿಂದ ನಡೆದುಕೊಂಡು ಬಂದ ಪದ್ದತಿಗೆ ಪುಲ್ ಸ್ಟಾಪ್ ಇಟ್ಟು ನಗುತ್ತಿದೆ. ಕರೋನಾ. ಇಂದು ಸರಿ ಹೋಗುತ್ತದೆ, ನಾಳೆ ಸರಿ ಹೋಗುತ್ತದೆ, ಎಂದು ಕಾದು ಕಾದು ಸುಸ್ತಾದ ಭಾವಗಳಿಗೆ ವಾಸ್ತವದ ಅರಿವು ಮೂಡಿಸಲು ಶತ ಪ್ರಯತ್ನ ಪಡುತ್ತಿದ್ದೇವೆ. ಒಂದೇ ಊಟ, ಒಂದೇ ನೋಟ, ಒಂದೇ ಮಾತು,ಕುಳಿತಲ್ಲೇ ಕೆಲಸ,ಪಿಳಿ ಪಿಳಿ ಕಣ್ಣು ಅದೇ ಮುಖ,ಅದೇ ಭಾವ,ಎಲ್ಲಿಯೂ ಹೋಗೋದು ಬರೋದು ಅಂತೂ ಇಲ್ವೇ ಇಲ್ಲ.ಕೇವಲ ಭಯ ಭಯ. ಕಪಾಟಿನಲ್ಲಿ ಡ್ರೆಸ್ಸುಗಳಂತೆ ಬದುಕು ಬಣ್ಣ ಮಾಸುತ್ತಿದೆ ದುಬಾರಿ ಮೇಕಪ್ ಕಿಟ್‌ಗಳಂತೆ ಭಾವಗಳು ಡೇಟ್ ಬಾರ ಆಗುತ್ತಿವೆ. ಒಂದಿನ ರಜೆ ಸಿಕ್ಕಿದ್ರೆ ಸಾಕಪ್ಪ ಅಂತಿದ್ದವರು ಯಾವಾಗಪ್ಪ ಕೆಲಸಕ್ಕೆ ಹೋಗೋದು ಎಂದು ಒದ್ದಾಡುತ್ತಿದ್ದಾರೆ. ಮಾಡಬೇಕಾದ ಕೆಲಸಗಳೆಲ್ಲ ಮಕಾಡೆ ಮಲಗಿವೆ. ಆದರೆ ರಾತ್ರಿ ಬೆಳಗು ಮಾತ್ರ ಆಗುತ್ತಲೇ ಇದೆ,  ನಾವು ಮಾತ್ರವೇ ನಿಂತ ನೀರಾಗಿದ್ದೇವೆ ಎಂದು ಅಲವತ್ತು ಕೊಳ್ಳುತ್ತ,  ಆವಾಹನೆ ಮಾಡದೇ ಹೋದರೂ ಬರುವ ಬೇಸರದ ಬೂತಕ್ಕೆ ಬಸವಳಿದು ಹೋಗಿದ್ದೇವೆ. ಆರಂಭದ ಬದಲಾವಣೆಯನ್ನು ನಗು ನಗುತ್ತಲೇ ಸ್ವೀಕರಿಸಿದ ನಾವು,ಹೊಸ ಮಾರ್ಪಾಡಾಗಿ ಬದಲಾಯಿಸಿಕೊಳ್ಳಬೇಕೆಂದುಕೊಂಡ ನಾವು, ಈಗ ಮುಗುಮ್ಮಾಗಿ ಕುಳಿತಿದ್ದೇವೆ. ಉತ್ಸಾಹ ಕುಂದಿದೆ.ಅಯ್ಯೋ ಏನಾದರೂ ಆಗಲಿ, ಒಂದು ಬದಲಾವಣೆ ಬರಲಿ, ಎಂದು ಬಕ ಪಕ್ಷಿಯಂತೆ ಕಾಯುತ್ತಿದ್ದೇವೆ. ಬಂದಿಸಿಟ್ಟ ಸಮಯವನ್ನೂ ಸಂಯಮದಿಂದ ಕಳೆಯಬೇಕು. ಹೊಸತೇನ್ನೋ ಕಂಡುಕೊಳ್ಳಬೇಕು,ಎಂದು ಮನಸಿನಲ್ಲಿ ಲೆಕ್ಕ ಹಾಕಿದ ಸರಕುಗಳೆಲ್ಲ ಮುಗಿದು ಹೋಗಿವೆ. ಏನನ್ನೇ ಆದರೂ ಎದುರಿಸುವ ಛಲ ಕಳ್ಳಬೆಕ್ಕಿನಂತೆ ಓಡಾಡುತ್ತಿದೆ. ಯಾವ ಏಕತಾನತೆಯೇ ಆದರೂ ಬೇಸರ ತರಿಸುವುದು ಮನುಷ್ಯನ ಸ್ವಾಭಾವಿಕ ಗುಣಲಕ್ಷಣ,ಬಂಗಲೆಯಲ್ಲಿ ಬದುಕುವವಗೆ ಗುಡಿಸಲು ಆಕರ್ಷಿಸುವಂತೆ, ಗುಡಿಸಲು ಅರಮನೆಯ ಕನಸು ಕಾಣುವಂತೆ, ನಿರಂತರವಾದ ಸುಖ, ಪ್ರೀತಿ,ನೋವು, ಕಷ್ಟಗಳೂ, ಬದಲಾವಣೆಯನ್ನು ಬಯಸುತ್ತವೆ ಮತ್ತು ಬದಲಾವಣೆಯ ಮಾರ್ಗವನ್ನೂ ಕಂಡುಕೊಳ್ಳುತ್ತವೆ. ಯಾಕೆಂದರೆ ಮನುಷ್ಯ ಸದಾ ಚಲನೆಯನ್ನು ಇಷ್ಟಪಡುತ್ತಾನೆ. ನಿಂತ ನೀರಾದರೆ ಅಸಾಧ್ಯ ಅಸಹನೆಯಿಂದ ಗಬ್ಬುನಾರಲು ಶುರುವಾಗುತ್ತಾನೆ. ಓಡುವ ಮೋಡ,ಹರಿಯುವ ನದಿ. ಬೀಸುವ ಗಾಳಿ,ಕೊನೆಗೆ ಭೂಮಿ ಸೂರ್ಯ ಚಂದ್ರ ಸಕಲ ಗ್ರಹಗಳೂ ಚಲನೆಯ ಪ್ರತೀಕವೇ.ಅವುಗಳನ್ನೆಲ್ಲ ಹೇಗೆ ತಡೆದು ಹಿಡಿಯಲು ಸಾಧ್ಯವಿಲ್ಲವೋ , ತಡೆದರೂ ಅನಾಹುತವಾಗುವದೋ, ಮನುಷ್ಯನ ಚಲನೆಯನ್ನು ತಡೆದರೂ ಅದೇ ಸಂಭವಿಸುತ್ತದೆ.  ಇನ್ನು ಪುಟ್ಟ ಪುಟ್ಟ ಮಕ್ಕಳನ್ನು ಹೇಗೆ ಒಂದೇ ಗತಿಯಲ್ಲಿ ಇಡಲು ಸಾಧ್ಯ. ಬಹಳವೇ ಖಿನ್ನರಾಗುತ್ತಿದ್ದಾರೆ ಅವರು. ಶಾಲೆ ಎನ್ನುವುದು ಮಕ್ಕಳಿಗೆ ಬೇಸರಕ್ಕಿಂತ ಹೆಚ್ಚು ಆಪ್ತಸಂಗತಿ. ಮನೆಯಲ್ಲಿ ಇದ್ದೂ ಇದ್ದೂ ಏನೂ ಘಟಿಸದ ಬದುಕಿನಿಂದ ಬೇಸತ್ತ ಭಾವ ಹಲವು ಮಕ್ಕಳಲ್ಲಿ ವ್ಯಕ್ತವಾಗುತ್ತಿದೆ. ಸ್ವಚ್ಚಂದ ಹಕ್ಕಿಗಳ ಗೂಡಿನಲ್ಲಿ ತುಂಬಿದರೆ ಏನಾದೀತು ಅಲ್ಲವೇ!? ಎನನ್ನೇ ಆದರೂ ಸ್ವಲ್ಪ ದಿನ ಸಹಿಸಿಕೊಳ್ಳುತ್ತದೆ. ಮನಸು. ಬಹಳ ಧೀರ್ಘಕಾಲದವರೆಗಿನ ಏಕತಾನತೆಗೆ ಒಳಗಾಗಲಾರದು. ಬದಲಾವಣೆ ಬಯಸುತ್ತಲೇ ಇರುತ್ತದೆ. ಆಗಲೇ ಅಲ್ಲವೇ? ನಾವು ಪ್ರವಾಸ, ಶಾಪಿಂಗ್,ಸಂಬಂಧಿಕರಮನೆ,ಅಂತೆಲ್ಲ ತಾತ್ಕಾಲಿಕ ಗ್ಯಾಪ್ ತೆಗೆದುಕೊಂಡು ಮತ್ತೆ ಸ್ವಕ್ಷೇತ್ರಕ್ಕೆ ಮರಳುವದು. ಜೀವನದ ಪರ್ಯಂತ ನಾವು ಹೀಗೆ ಮನಸ್ಸನ್ನು, ಬದುಕನ್ನು, ರಿಪ್ರೆಷ್ ಆಗುವ ಕಾರ್ಯ ಮಾಡುತ್ತಲೇ ಇರುತ್ತೇವೆ,ಏಕೆಂದರೆ ಆಗಾಗ ಬರುವ ಏಕತಾನತೆಯಿಂದ ಮಕ್ತಿಪಡೆಯಲು,ಅದು ಸರಿಕೂಡಾ. ಆದರೆ ಈಗ !? ಬದಲಾವಣೆಗಳನ್ನು ಬರಮಾಡಿಕೊಳ್ಳಲಾಗದೇ ಅಸಹಾಯಕರಾಗಿ ಪರ ಪರ ಕೆರೆದುಕೊಳ್ಳುವ ಹಂತಕ್ಕೆ ತಲುಪಿದ್ದೇವೆ. ಅಪರೂಪಕ್ಕೆ ಹೊರಗೆ ಕಾಲಿಟ್ಟ ಗಳಿಗೆಯನ್ನೇ ಭಯಂಕರ ಖುಷಿಯಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಇಷ್ಟೆಲ್ಲ ಬದಲಾವಣೆಗಳನ್ನು ಮನಸು ಬಯಸುವಾಗ, ಇನ್ನೆಷ್ಟು ದಿನ ಒಂದೇ ರುಚಿಯ ಫಲಾವ್ ಅನ್ನೇ ಹೊಗಳಿ ಹೊಗಳಿ ತಿನ್ನಲು ಸಾಧ್ಯ!? ಅವನ ಏಕತಾನತೆಗೂ ಅರ್ಥವಿದೆ ಅಂತನ್ನಿಸಿತು ನನಗೂ. ಮತ್ತೆ ನನ್ನೆದುರು ಬಂದು ಅಮ್ಮಾ ಶಾಲೆ ಶುರುವಾದರೆ ಎಲ್ಲ ಸರಿಯಾಗುತ್ತೆ ಅಂದ. ಹೌದು ಕಣೋ ಶಾಲೆಗೆ ಹೋಗಿ ಬಿಸಿಯೂಟ ಉಂಡು ಸ್ನೇಹಿತರ ಜೊತೆ ಕಳೆದು ಓದು ಬರಹ ತಲೆ ತುಂಬಾ ಹೊದ್ದು ಹೈರಾಣಾದಾಗ. ಖಂಡಿತವಾಗಿ ಮತ್ತದೇ ಫಲಾವ್ ಗೆ ಬಾಯಿ ಚಪ್ಪರಿಸುತ್ತೀಯಾ. ಬದುಕೂ ಹಾಗೆ  ಸಂಪೂರ್ಣವಾಗಿ ನಿರಂತರ ಬದಲಾವಣೆಯೊಂದಿಗೇ ಅನುಭವಿಸುತ್ತಿರಬೇಕು ಆಗಲೇ ಲವಲವಿಕೆ. ಕಾಲ ಚಕ್ರದ ಗತಿಯಲ್ಲಿ ಏಳುಬೀಳುಗಳ ಸರಿದೂಗಿಸಿ ಹೋರಾಡುತ್ತಿದ್ದರೇ ಬದುಕಿಗೊಂದು ಅರ್ಥ ಎಂದೆ. ಬೇಗ ಶಾಲೆ ಶುರುವಾಗಲಿ ಎಂದು ಪ್ರಾರ್ಥಿಸುತ್ತಿದ್ದ. *******************************************************

ಏಕೀ ಏಕತಾನತೆ Read Post »

ಇತರೆ

ನಿತ್ಯ ಸಾವುಗಳ ಸಂತೆಯಲಿ ನಿಂತು

ಲೇಖನ ನಿತ್ಯ ಸಾವುಗಳ ಸಂತೆಯಲಿ ನಿಂತು ಬದುಕ ಪ್ರೀತಿ ಧೇನಿಸುತ್ತಾ… ಮಲ್ಲಿಕಾರ್ಜುನ ಕಡಕೋಳ ಕೊರೊನಾ ಎಂಬ ಸಾವುಗಳ ಶಕೆ ಆರಂಭವಾಗಿ ಆರೇಳು ತಿಂಗಳುಗಳೇ ಕಳೆಯುತ್ತಿವೆ. ತೀರಾ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ಜಾಲಾಡುತ್ತಿದ್ದರೆ ಗುಡ್ಡೆ, ಗುಡ್ಡೆ ಸಾವುಗಳ ಗುಡ್ಡವೇ ಗೋಚರ. ಜತೆಯಲಿ ಕೆಲಸ ಮಾಡಿದ ಸಹೋದ್ಯೋಗಿಗಳು ಸೇರಿದಂತೆ ನಮ್ಮ ಸಾಂಸ್ಕೃತಿಕ ಬಳಗದ ಒಡನಾಟದಲ್ಲಿರುವ ಸಾಹಿತಿ, ಕಲಾವಿದರ ಸಾಲು ಸಾಲು ಸಾವುಗಳು. ಸಾಹಿತಿ, ಕಲಾವಿದರ ಸಾವಿಲ್ಲದ ದಿನಗಳೇ ಇಲ್ಲ ಎನ್ನುವಂತಾಗಿದೆ. ನಾಳೆ ಯಾರ ಸರದಿಯೋ..? ಸಾವಿನ ಸರದಿಯಲ್ಲಿ ಕಾಯುತ್ತಾ ನಿಂತಂತಹ ನಡುಕ ಹುಟ್ಟಿಸುವ ದುಗುಡ, ದುಮ್ಮಾನ ಬಹುತೇಕ ಎಲ್ಲರನ್ನೂ ಕಾಡುತ್ತಿರುವುದು ಸುಳ್ಳಲ್ಲ. ಅರೇ! ಇದೇನಿದು ಸಂಸ್ಕೃತಿ ಚಿಂತಕರು ಈ ಪರಿಯಾಗಿ ಸಾವಿಗಂಜುವುದೇ!? ಅಂತ ಅನಿಸಬಹುದು. ಹಾಗೆ ಅಂಜಿ ಅಡಗಿ ಕುಳಿತರೇನು ಸಾವು ದೂರ ಸರಿಯುವುದುಂಟೇ ? ಇಲ್ಲವೇ ಇಲ್ಲ ಅದು ಯಾರನ್ನೂ ಬಿಡುವುದಿಲ್ಲ. ಸಾವು ಬಂದರೇನು ಸಿಟ್ಟಿಲ್ಲ. ಅದು ಮಹಾ ಮಹಾಂತರನೇ ಬಿಟ್ಟಿಲ್ಲ ಎಂಬ ತತ್ವಪದ ನೆರವಿಗಿದ್ದರೂ ಸಾವು ಬೇಕಾದರೆ ಬರಲಿ. ಆದರೆ ಕೊರೊನಾ ಬಾರದಿರಲಿ. ಸೋಜಿಗವೆಂದರೆ ದುಗುಡ ತುಂಬಿದ ಈ ದುರಿತ ಕಾಲದಲ್ಲೇ ಬಹಳಷ್ಟು ಬರಹಗಳು, ಚಿಂತನೆಗಳು, ಆನ್ ಲೈನ್ ಎಂಬ ಮಹಾಬಯಲು ಆಲಯದಲ್ಲಿ ಬೆಳಕು ಕಾಣುತ್ತಿವೆ. ಒಂದು ಮಾತು ಮಾತ್ರ ಖರೇ, ಅದೇನೆಂದರೆ : ಸಾವಿಗಂಜದವರೂ ಪ್ರಾಣಹಂತಕ ಕೊರೊನಾ ವೈರಾಣುವಿಗೆ ಹೆದರಿದ್ದಾರೆ. ಹೀಗೆ ಕೊರೊನಾಕ್ಕೆ ಹೆದರಿ, ಹೆದರಿ ಖಿನ್ನತೆಯ ದರಪ್ರಮಾಣ ಯದ್ವಾತದ್ವಾ  ಏರಿಕೆಯಾಗಿದೆ. ಸಮೀಕ್ಷೆಯೊಂದರ ಪ್ರಕಾರ ಶೇಕಡಾ ಎಪ್ಪತ್ತಕ್ಕೂ ಹೆಚ್ಚುಮಂದಿ ಮಧ್ಯಮ ವರ್ಗದವರು ಕೊರೊನಾ ಭೀತಿರೋಗದ ಖಿನ್ನತೆಯಿಂದ ನರಳುತ್ತಿದ್ದಾರೆ. ಮನುಷ್ಯರ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ನೆನಪಿಗೆ ಬರುವುದೇ ಕೊವಿಡ್. ಅವರಿಗೆ ಬಂದುದು ಕೊವಿಡ್ಅಲ್ಲರಿ, ಅದು ಹಾರ್ಟ್ ಅಟ್ಯಾಕ್ ಅಂತ ಹೇಳಿದರೂ ನಂಬುಗೆಯೇ ಬರುವುದಿಲ್ಲ. ಕೊವಿಡ್ ಎಂಬ ಕಳಂಕದ ಅಪರಾಧಪ್ರಜ್ಞೆ ಭಲೇ ಭಲೇ ವಿದ್ಯಾವಂತರನ್ನೇ ಕಾಡುತ್ತಿದೆ. ಪತ್ರಿಕೆ, ಮೊಬೈಲುಗಳ ತುಂಬೆಲ್ಲಾ ದಿನನಿತ್ಯವೂ ಸಾವಿನ ಸುದ್ದಿಗಳದೇ ಸುಗ್ಗಿ. ವಾಟ್ಸ್ಯಾಪ್, ಮುಖಹೊತ್ತಿಗೆಗಳನ್ನು ಓಪನ್ ಮಾಡಲು ಧೈರ್ಯಬಾರದು. ಅಬ್ಬಾ! ಇವತ್ತು ಯಾರು ನಮ್ಮನ್ನು ಅಗಲಿದ್ದಾರೆಂಬ ಭಯಾನಕ ಹೆದರಿಕೆ. ತೀರಿಹೋದ ಸಾಹಿತಿ, ಕಲಾವಿದರ ಕೃತಿಗಳು ಅವರ ಬದುಕಿನ ಸಾಂಸ್ಕೃತಿಕ ಒಡನಾಟಗಳು, ಅವರ ಸಕ್ರಿಯ ಚಟುವಟಿಕೆಗಳು ನನ್ನಂಥ ಅನೇಕರನ್ನು ಆರ್ದ್ರವಾಗಿ ಕಾಡುವುದು ಸಹಜ. ಅದೆಲ್ಲ ಭಾವನಾತ್ಮಕ ನಡವಳಿಕೆ, ಪುಕ್ಕಲು ಮನಸ್ಥಿತಿ  ಎಂದು ಹಗುರವಾಗಿ ಪರಿಗಣಿಸಲು ಬಾರದು, ಅದು ತರವಲ್ಲ. ಹೀಗೆ ಕಾಡುತ್ತಲೇ ಇರುವ ಕಾಡಾಟದ ಹಿಂದೆ ದೈಹಿಕ ಸಾವಿಗೆ ಕಾರಣವಾದ ಪೈಶಾಚಿಕ ಗಾತ್ರದ ಪ್ಯಾಂಡಮಿಕ್ ಹುಡುಕಾಟ. ಈ ಜಿಜ್ಞಾಸೆ ಅತಿರೇಕಗೊಂಡು ದುಃಸ್ವಪ್ನದಂತೆ ನಮಗೆ ನಾವೇ ಕಂಡುಕೊಳ್ಳುವ ಎಲ್ಲ ಸಾವುಗಳ ಹಿಂದಿನ ಕಾರಣ ಕೊರೊನಾ. ಅದೀಗ ಜಾಗತಿಕ ಮಟ್ಟದಲ್ಲಿ ಮೃತ್ಯುವಿನ ಪೆಡಂಭೂತವಾಗಿದೆ. ಹೌದು ಸಾವಿಗೆ ಪರ್ಯಾಯ ಪದವೇ ಮತ್ತೆ ಮತ್ತೆ ಕೊರೊನಾ.. ಕೊರೊನಾ.. ಮಾತ್ರ ಎನ್ನುವಂತಾಗಿದೆ.  ಹೀಗೆ ಎಲ್ಲ ಸಾವುಗಳ ಹಿಂದೆ ಕೊರೊನಾ ಡೊಕ್ಕು ಹೊಡೆದಿರುತ್ತದೆಂಬ ಅಚಲ ನಂಬಿಕೆಯು ಸಾರ್ವತ್ರಿಕವಾಗತೊಡಗಿದೆ. ಅಕ್ಷರಶಃ ಅಕ್ಷರಸ್ಥ ಮತ್ತು ವಿದ್ಯುನ್ಮಾನ ಲೋಕದ ಒಡನಾಟವಿರುವ ಎಲ್ಲರ ಗಾಢ ನಂಬುಗೆಯೆಂದರೆ ನಿಸ್ಸಂದೇಹವೆಂಬಂತೆ  ಜಗತ್ ಪ್ರಸಿದ್ದ ಜಡ್ಡು ಎಂಬ ಖ್ಯಾತಿ ಗಳಿಸಿರುವ ಕೊರೊನವೇ ಸಾವಿನ ಮೂಲ. ಅದೀಗ ಹಳ್ಳಿ ಹಳ್ಳಿಗಳಲ್ಲಿಯೂ ರುದ್ರನರ್ತನ ಶುರುಮಾಡಿದೆ. ಕೊರೊನಾ ವೈರಾಣುಗಿಂತ ಅದರ ಸುತ್ತ ಹೆಣೆದು ಸ್ಥಾಯೀಗೊಳಿಸಿದ ಥರಾವರಿ ಹುನ್ನಾರದ ಕಥಾಕಥಿತ ಭಯಾನಕ ವಿದ್ಯಮಾನಗಳೇ ಮರಣವನ್ನು ತರುತ್ತಿವೆ. ಇಂತಹ ಸಾವುಗಳ ಶವಸಂಸ್ಕಾರ ಮತ್ತೊಂದು ಘನಘೋರ ಎಪಿಸೋಡ್. ಕ್ರೂರಿ ಕೊರೊನಾದ ಈ ಕಾಲಘಟ್ಟದಲ್ಲಿ ವಯೋಸಹಜ ಸಾವಿಗೂ ಸಿಗಬೇಕಾದ ಗೌರವ ಖಂಡಿತಾ ಸಿಗುತ್ತಿಲ್ಲ. ಎಲ್ಲಾ ಸಾವುಗಳನ್ನು ಕೊರೊನಾ ಕನ್ನಡಕದ ಮೂಲಕ ನೋಡುವಂತಾಗಿದೆ. ಮುಂಬಯಿನಂತಹ ಮಹಾನಗರಗಳಲ್ಲಿ ಕೊರೊನಾ ಪೀಡಿತರ ಸಾವುಗಳ ಕುಟುಂಬದವರೇ ಶವವನ್ನು ಪಡೆಯದೇ ಅನಾಥ ಶವಗಳಂತೆ ಮಹಾನಗರ ಪಾಲಿಕೆಗೆ ಶವ ಒಪ್ಪಿಸಿಬಿಡುವ ಅಮಾನವೀಯ ಸ್ಥಿತಿ ನಿರ್ಮಾಣಗೊಂಡಿದೆ. ನಮ್ಮಲ್ಲಿಯೂ ಪರಿಸ್ಥಿತಿ ಅಷ್ಟೇನು ಭಿನ್ನವಾಗಿಲ್ಲ. ಮಹಾನಗರ ಪಾಲಿಕೆಗಳು ನೆರವೇರಿಸುವ ಕೊವಿಡ್ ಶವಸಂಸ್ಕಾರ ಹೇಗಿರುತ್ತದೆಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಅಸಲಿಗೆ ಅಲ್ಲಿ ಶವಸಂಸ್ಕಾರದ ತರಬೇತಿ ಪಡೆದ ಸಿಬ್ಬಂದಿ ಇರುವುದಿಲ್ಲ. ಮನುಷ್ಯರಿಗೆ ಬದುಕಿದ್ದಾಗಲೂ ಗೌರವ ಸಿಗದ ಸನ್ನಿವೇಶದ ಈ ಕಾಲದಲ್ಲಿ ಸತ್ತಾಗಲಾದರೂ ಕಿಂಚಿತ್ ಗೌರವ ಬೇಡವೇ.? ಬಳ್ಳಾರಿ, ಚನ್ನಗಿರಿ, ಯಾದಗಿರಿ ಘಟನೆಗಳು ನಮ್ಮೆದುರಿಗಿವೆ . ಬಳ್ಳಾರಿಯಲ್ಲಂತೂ ಒಂಬತ್ತು ಹೆಣಗಳನ್ನು ಸತ್ತ ನಾಯಿ, ಹಂದಿಗಳನ್ನು ಎಳಕೊಂಡು ಬರುವಂತೆ ದರದರನೆ ಎಳಕೊಂಡು ಬಂದು ಎಲ್ಲಾ ಒಂಬತ್ತು ಹೆಣಗಳನ್ನು ಒಂದೇ ಗುಣಿಯಲ್ಲಿ ಎಸೆದು ಬಿಡುವ ದೃಶ್ಯಗಳನ್ನು ನೋಡುತ್ತಿದ್ದರೆ ಕೊರೊನಾ ಎಂತಹ ರಣಭೀಕರ ಭಯ ಹುಟ್ಟಿಸಿದೆಯೆಂಬುದು ತಿಳಿಯುತ್ತದೆ. ಖುದ್ದು ಮಗನೇ ತಂದೆ ತಾಯಿ ಹೆಣದ ಮುಖ ನೋಡಲು ಸಿದ್ದನಿಲ್ಲ. ಇನ್ನು ಒಡಹುಟ್ಟಿದವರು ತಮ್ಮ ತಮ್ಮ ಮನೆಯವರ ಕೊವಿಡ್ ಹೆಣಗಳನ್ನು ಖುದ್ದು ಶವಸಂಸ್ಕಾರಕ್ಕೆ ಸಿದ್ಧರಿಲ್ಲ. ಹೀಗೆ ಮನುಷ್ಯ ಸಂಬಂಧ, ಪ್ರೀತಿ, ಅಂತಃಕರಣಗಳು ನಿರ್ನಾಮಗೊಳ್ಳುತ್ತಿವೆ. ಒಟ್ಟು ಮಾನವ ಸಮಾಜ ಮಾನವೀಯತೆ ಕಳೆದುಕೊಳ್ಳುವ ಹೆದ್ದಾರಿಯಲ್ಲಿದೆ. ಇದೆಲ್ಲ ಗಮನಿಸುತ್ತಿದ್ದರೆ ಕೊವಿಡ್ ಸಂವೇದನಾಶೀಲ ಜೀವಸಂಬಂಧಗಳನ್ನೇ ಛಿದ್ರ ವಿಛಿದ್ರಗೊಳಿಸಿದ್ದು ಖರೇ. ತಂದೆ, ತಾಯಿ, ಮಕ್ಕಳ ನಡುವಿನ ಸಂಬಂಧಗಳನ್ನೇ ಕೊಂದು ಹಾಕಿದೆ. ತಿಂಗಳುಗಟ್ಟಲೇ ವಿದ್ಯುನ್ಮಾನ ಮಾಧ್ಯಮಗಳು ಕೊರೊನಾ ಕುರಿತು ರಣಭಯಂಕರ ಭಯ ಹುಟ್ಟಿಸಿ ಇದೀಗ ತಾರಾಲೋಕದ ನಶಾ ಜಗತ್ತಿನತ್ತ ಚಿತ್ತ ಹರಿಸಿವೆ. ಕೊವಿಡ್ ಕುರಿತು ಅವು  ಒಂದು ವರ್ಷಕ್ಕಾಗುವಷ್ಟು ಭಯೋತ್ಪಾದನೆಯ ಎಲ್ಲ ಬಗೆಯ ವೈರಾಣುವಿಗಿಂತ ಭೀಕರವಾದ ಸರಕು, ಶಸ್ತ್ರಾಸ್ತ್ರಗಳನ್ನು ಸಿದ್ಧಗೊಳಿಸಿಯಾಗಿದೆ‌.    ಕೊವಿಡ್ ಕೇಂದ್ರಗಳು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಆಸ್ಪತ್ರೆಗಳಲ್ಲಿ ಮುಖ್ಯವಾಗಿ ಬೇಕಿರುವುದು ಆಪ್ತಸಮಾಲೋಚನೆಯ ಘಟಕ. ಅಲ್ಲಿ ಪರಿಣಿತ ಸಿಬ್ಬಂದಿಗಳಿರಬೇಕು. ಎಷ್ಟೋಮಂದಿ ಭಯಭೀತರಾಗಿ ಕೊರೊನಾ ಶಂಕೆಯಿಂದಾಗಿ ಆತ್ಮಹತ್ಯೆಯ ಮೊರೆ ಹೋಗಿರುವುದುಂಟು. ಇಂಥವರಿಗೆ ಸಕಾಲದಲ್ಲಿ ಆಪ್ತಸಮಾಲೋಚಕರಿಂದ ಸೂಕ್ತ ಕೌನ್ಸೆಲಿಂಗ್ ದೊರಕಿದ್ದರೆ ಬದುಕುಳಿಯುವ ಸಾಧ್ಯತೆಗಳಿದ್ದವು. ಕೊರೊನಾಕ್ಕೆ ಚಿಕಿತ್ಸೆಯೇ ಇಲ್ಲವೆಂದಾದಲ್ಲಿ ಹೆಚ್ಚುಪಾಲು ಆಪ್ತ ಸಮಾಲೋಚನೆಯೇ ಸರಿಯಾದ ಮದ್ದು. ಬಹಳಷ್ಟು ಜನ ಕೊರೊನಾ ಕುರಿತು ಪ್ಯಾನಿಕ್ ಆಗಿಯೇ ರೋಗನಿರೋಧಕ ಶಕ್ತಿ ಕಳೆದುಕೊಳ್ಳುತ್ತಾರೆ. ಅಂಥವರೇ ಅಧಿಕ ಸಂಖ್ಯೆಯಲ್ಲಿರುವುದರಿಂದ ಆಪ್ತ ಸಮಾಲೋಚನೆಗೆ ಅಧಿಕ ಆದ್ಯತೆ ನೀಡಬೇಕಿದೆ. ಮಾಸ್ಕ್ ಬಿಸಾಕಿ ನಿರ್ಭಯವಾಗಿ ಜನರ ನಡುವೆ ಓಡಾಡುವ, ಮೊದಲಿನಂತೆ ಸಮುದಾಯದಲ್ಲಿ ನಿರ್ಭೀತಿಯಿಂದ ಬೆರೆತು ಬಾಳುವ ಸಹಭಾಗಿತ್ವದ ವಾತಾವರಣ ಇನ್ನುಮುಂದೆ ಇಲ್ಲವೇ? ಕೊವಿಡ್ ಹತ್ತೊಂಬತ್ತರ ದುರಿತಕಾಲ ಕೊನೆಗೊಂಡು ಮತ್ತೆ ಮರಳಿ ಹಿಂದಿನ ಆ ದಿನಗಳನ್ನು ಕಾಣಬಲ್ಲೆವೇ ? ಕಾಣುವುದಾದರೆ ಯಾವಾಗ ಯಾವ ತಿಂಗಳ ಯಾವ ದಿನಗಳಿಂದ ? ಮಣಭಾರದ ಈ ಪ್ರಶ್ನೆಗಳಿಗೆ ಸರಕಾರದ ಬಳಿ, ವಿಜ್ಞಾನಿಗಳ ಬಳಿ, ವೈದ್ಯರ ಬಳಿ, ಹೋಗಲಿ ದೇವರಿದ್ದರೆ ದೇವರ ಬಳಿ ಹೀಗೆ ಯಾರ ಬಳಿಯಲ್ಲಾದರು ಉತ್ತರಗಳಿದ್ದರೆ ಸಾರ್ವಜನಿಕವಾಗಿ ತಿಳಿಸಿ ಪುಣ್ಯ ಕಟ್ಟಿಕೊಳ್ಳಲಿ. *********************************************  

ನಿತ್ಯ ಸಾವುಗಳ ಸಂತೆಯಲಿ ನಿಂತು Read Post »

ಇತರೆ

ಎಂಜಿನಿಯರ್ಸ್ ಆಗಿ ನಾವೇನು ಮಾಡಬಹುದು?

ಲೇಖನ ಎಂಜಿನಿಯರ್ಸ್ ಆಗಿ ನಾವೇನು ಮಾಡಬಹುದು? ಸುಶ್ಮಿತಾ ಐತಾಳ್        ಎಂಜಿನಿಯರ್ಸ್ ಡೇ ಆದ ಇಂದು ಎಲ್ಲೆಲ್ಲೂ ನಮಗೆ ಆದರ್ಶ ಪ್ರಾಯರಾಗಿರುವ ಮಹಾನ್ ವ್ಯಕ್ತಿ ವಿಶ್ವೇಶ್ವರಯ್ಯನವರ ಭಾವಚಿತ್ರಗಳು ರಾರಾಜಿಸುತ್ತಿರುವುದು ಕಾಣುತ್ತಿವೆ. ಅವರು ಎಷ್ಟು  ಬುದ್ಧಿವಂತರಾಗಿದ್ದರು, ಎಷ್ಟು ಪರಿಶ್ರಮಿಗಳೂ ಪ್ರಾಮಾಣಿಕ ಕೆಲಸಗಾರರೂ ಶಿಸ್ತಿನ ಸಿಪಾಯಿಯೂ ಆಗಿದ್ದರು ಮುಂತಾಗಿ ಅವರ ಗುಣ ಗಾನ ಮಾಡುವುದು ಕೇಳುತ್ತಿದೆ. ಆದರೆ ಇಷ್ಟು ಮಾಡಿದರೆ ಮುಗಿಯಿತೇ? ವಿಶ್ವೇಶ್ವರಯ್ಯ ಅವರ ಹುಟ್ಟಿದ ದಿನವನ್ನು ಎಂಜಿನಿಯರ್ಸ್ ಡೇ ಎಂದು ನಾವು ಯಾಕೆ ಆಚರಿಸುತ್ತೇವೆ? ಈ ದಿನ ನಾವು ಏನನ್ನು ನೆನಪಿಸಿಕೊಳ್ಳ ಬೇಕಾಗಿದೆ?         ನಮ್ಮ ದೇಶದಲ್ಲಿ ದಿನದಿನವೂ ಸಾವಿರಾರು ಅಪಘಡ ಮತ್ತು ಅಪಘಾತಗಳ ಬಗ್ಗೆ ನಾವು ಕೇಳುತ್ತಿದ್ದೇವೆ..ರಸ್ತೆಗಳುದ್ದಕ್ಕೂ ಕಾಣುವ ಹೊಂಡ ಗುಂಡಿಗಳು, ಮುರಿದು ಬೀಳುವ ಸೇತುವೆಗಳು, ಬಿರುಕು ಬಿಡುವ ಗೋಡೆಗಳು, ಸೋರುವ ತಾರಸಿಗಳು, ಕುಸಿಯುವ ಕಟ್ಟಡಗಳು, ಹೊಗೆಯುಗುಳಿ ಪರಿಸರವನ್ನು ವಿಷಮಯಗೊಳಿಸುವ ಕಾರ್ಖಾನೆಗಳು- ಹೀಗೆ ಎಲ್ಲೆಡೆಯೂ ಸರಕಾರದಿಂದಲೋ ಖಾಸಗಿ ಸಂಸ್ಥೆ ಮತ್ತು ವ್ಯಕ್ತಿಗಳಿಂದಲೋ  ಹಂಚಿಕೆಗೊಳಿಸಲ್ಪಡುವ ಹಣವನ್ನು ನುಂಗಿ ಒಳಗೆ ಹಾಕಿಕೊಂಡು ಯಾವುದೇ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆ ಇಲ್ಲದೆ ಜನತೆಗೆ ದ್ರೋಹ ಬಗೆಯುವ ಎಂಜಿನಿಯರ್ಗಳು ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಇಂಥವರಲ್ಲಿ ಜವಾಬ್ದಾರಿಯ ಅರಿವು ಮೂಡಿಸುವವರು ಯಾರು? ಅಥವಾ ಮೂಡಿಸುವ ಬಗೆ ಎಂತು?     ಮನುಷ್ಯ ಮನಸ್ಸು ಮಾಡಿದರೆ ಸಾಧ್ಯವಾಗದಿರುವುದು ಯಾವುದೂ ಇಲ್ಲ. ಸಂಕಲ್ಪ ಶಕ್ತಿ ನಮ್ಮಲ್ಲಿ ಇರಬೇಕು ಅಷ್ಟೆ. ಎಂಜಿನಿಯರುಗಳು ದೇಶದ ಬೆನ್ನೆಲುಬು ಇದ್ದ ಹಾಗೆ. ಅನೇಕ ಯುವ ಎಂಜಿನಿಯರುಗಳಿಗೆ ತಾವೇನು ಮಾಡಬೇಕಾಗಿದೆ, ಏನು ಮಾಡುತ್ತಿದ್ದೇವೆ ಅನ್ನುವ ಅರಿವಾಗಲಿ ಚಿಂತನೆಯಾಗಲಿ ಇರುವುದಿಲ್ಲ. ಕೈಗೆ ಸಂಬಳವೋ ಗಿಂಬಳವೊ ಬಂದರಾಯಿತು, ಜನತೆಯ ಸೌಖ್ಯದ ಚಿಂತೆ ತಮಗೆ ಯಾಕೆ ಅಂದುಕೊಳ್ಳುತ್ತಾರೆ. ಅಂಥವರಲ್ಲಿ ಅರಿವು ಮೂಡಿಸುವ ಕೆಲಸವನ್ನು ಎಂಜಿನಿಯರುಗಳ ಸಂಘಟನೆಗಳು ಮಾಡಬೇಕು. ಕಾಲಕಾಲಕ್ಕೆ ಇಂಥ ವಿಷಯಗಳ ಬಗ್ಗೆ ಸಭೆಗಳಲ್ಲಿ ಚರ್ಚಿಸುವುದರಿಂದ ರಾತ್ರಿ ಬೆಳಗಾಗುವುದರೊಳಗೆ ಬದಲಾವಣೆಯಾಗದಿದ್ದರೂ, ಯುವಜನತೆಯಲ್ಲಿ     ಜವಾಬ್ದಾರಿಯ ಪ್ರಜ್ಞೆ ಮೂಡಿಸುವ ಕೆಲಸವಾದರೂ ಆಗಬಹುದು.ಆ ಮೂಲಕ ವಿಶ್ವೇಶ್ವರಯ್ಯನವರು ಮಾಡಿದ ಘನಕಾರ್ಯಗಳಿಗೆ ಗೌರವವಿತ್ತಂತಾಗಬಹುದು. *******************************************

ಎಂಜಿನಿಯರ್ಸ್ ಆಗಿ ನಾವೇನು ಮಾಡಬಹುದು? Read Post »

ಇತರೆ

ವಿಶ್ವ ಅಭಿಯಂತರರ ದಿನಾಚರಣೆ.

ಲೇಖನ ವಿಶ್ವ ಅಭಿಯಂತರರ ದಿನಾಚರಣೆ. ಜಯಶ್ರೀ.ಭ.ಭಂಡಾರಿ. ಮೋಕ್ಷಗುಂಡ ವಿಶ್ವೇಶರಯ್ಯನವರ ಜನ್ಮದಿನವನ್ನು ಇಂಜನೀಯರ್ಸ ಡೇಯಾಗಿ ಆಚರಿಸಲಾಗುತ್ತದೆ. ಇಂದು (ಸಪ್ಟಂಬರ 15) ಜಗತ್ತಿನ ಶ್ರೇಷ್ಠ ವಿಜ್ಞಾನಿಗಳಲ್ಲೊಬ್ಬರಾದ ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ನದಿನ. ಇದನ್ನು ಭಾರತದಲ್ಲಿ ಇಂಜನೀಯರ್ಸ ಡೇ ಯನ್ನಾಗಿ ಆಚರಿಸಲಾಗುತ್ತಿದೆ.ಇಂಜನೀಯರಿಂಗ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಅಪಾರ ಸೇವೆಯ ನೆನಪಿಗಾಗಿ ಅವರ ಜನ್ಮ ದಿನವನ್ನು ‘ಇಂಜನೀಯರ ದಿನ’ವನ್ನಾಗಿ ಆಚರಿಸಲಾಗುತ್ತದೆ.ಭಾರತ ಜನನಿಯ ತನುಜಾತೆ ಕರ್ನಾಟಕಕ್ಕೆ ವಿಶ್ವೇಶ್ವರಯ್ಯನವರು ದೊಡ್ಡ ಕೊಡುಗೆ.ಸಪ್ಟಂಬರ 15 1860 ರಂದು ಜನಸಿದ ಇವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿ ಮುಂಬೈ ರಾಜ್ಯದ ಪೂನಾದಲ್ಲಿ 1884 ರಲ್ಲಿ ಇಂಜನೀಯರಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬೈ ಸರ್ಕಾರದಲ್ಲಿ ಸೇವೆಯನ್ನು ಆರಂಭಿಸಿದರು.1907 ರವರೆಗೆ ಮುಂಬೈ ಸರ್ಕಾರದಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಮುಂದಿನ ಅವಧಿಯಲ್ಲಿ ಇಡೀ ಭಾರತ ದೇಶದಲ್ಲಿ ತಮ್ಮ ಪ್ರತಿಭೆಯಿಂದ ಹಾಗೂ ಕಾರ್ಯಗಳಿಂದ ಪ್ರಸಿದ್ಧರಾದರು.   ಮುಂಬೈ ರಾಜ್ಯದಲ್ಲಿ ವಿಶ್ವೇಶ್ವರಯ್ಯನವರ ಸೇವೆ ಅಸಾಧಾರಣ.ಪುಣೆ,ಕೊಲ್ಲಾಪುರ,ಸೋಲಾಪುರ, ವಿಜಾಪುರ ಮತ್ತು ಧಾರವಾಡ ಈ ನಗರಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ವಿನ್ಯಾಸಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.ಮುಂಬೈ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಇಟಲಿ ದೇಶದ ವಿಲಾಸ ಮತ್ತು ಈಡನ ನಗರಗಳಿಗೆ ಭೇಟ್ಟಿ ನೀಡಿ ಆ ನಗರಗಳ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಗಳ ಯೋಜನೆಯನ್ನು ರೂಪಿಸಿದ್ದರು. ಮುಂಬೈ ರಾಜ್ಯದಲ್ಲಿ ಅವರು ಸೇವೆಯಲ್ಲಿದ್ದಾಗ ಪುಣೆ ನಗರದಲ್ಲಿ ಆಗಿನ ಮಹಾನ ನಾಯಕರಾಗಿದ್ದ ಲೋಕಮಾನ್ಯ ತಿಲಕ,ರಾನಡೆಯವರು ಮತ್ತು ಗೋಪಾಲಕೃಷ್ಣ ಗೋಖಲೆಯವರಿಂದ ದೇಶಪ್ರೇಮವನ್ನು ಬೆಳೆಯಿಸಿಕೊಂಡರು.ಈ ಧೀಮಂತ ನಾಯಕರುಗಳ ಸಂಪರ್ಕದಿಂದ ರಾಷ್ಟ್ರಕ್ಕಾಗಿ ಯಾವ ರೀತಿಯಿಂದ ಸೇವೆ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟವರು.1902 ರಲ್ಲಿ ವಿಶ್ವೇಶ್ವರಯ್ಯನವರು ಮುಂಬೈಯಲ್ಲಿ ಸೇವೆಯಲ್ಲಿದ್ದಾಗಲೇ “Pಡಿeseಟಿಣ Sಣಚಿಣe oಜಿ ಇಜuಛಿಚಿಣioಟಿ iಟಿ ಒಥಿsoಡಿe” ಎನ್ನುವ ಪುಸ್ತಕವನ್ನು ಬರೆದು ಆಗಿನ ಮೈಸೂರು ಸಂಸ್ಥಾನದಲ್ಲಿ ಇರುವ ಸ್ಥಿತಿಗತಿಗಳನ್ನು ಉತ್ತಮ ಪಡಿಸುವುದಕ್ಕಾಗಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹಲವಾರು ರೂಪುರೇಷೆಗಳನ್ನು ಹಾಕಿದ್ದರು. ಮುಂಬೈ ರಾಜ್ಯದಲ್ಲಿ ನಿವೃತ್ತಿ ಪಡೆದುಕೊಂಡ ನಂತರ ಹೈದ್ರಾಬಾದ ಸಂಸ್ಥಾನದ ನಿಜಾಮರ ಕರೆ ಮೇರೆಗೆ ಹೈದ್ರಾಬಾದ ನಗರದ ನೀರು ಸರಬರಾಜು ಒಳಚರಂಡಿ ವ್ಯವಸ್ಥೆಯನ್ನು ಅಧ್ಯಯನ ಮಾಡಿ ಒಂದು ಯೋಜನೆಯನ್ನು ವಿನ್ಯಾಸಗೊಳಿಸಿದರು . ವಿಶ್ವೇಶ್ವರಯ್ಯನವರ ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಹೈದ್ರಾಬಾದ ಸಂಸ್ಥಾನದ ನಿಜಾಮರು ವಿಶ್ವೇಶ್ವರಯ್ಯನವರು ರೂಪಿಸಿದ ಯೋಜನೆಯನ್ನು ಅನುಷ್ಠಾನಗೊಳಿಸಿದರು.ಹೈದ್ರಾಬಾದ ನಗರವನ್ನು ನವೀಕರಿಸಿ ಆಧುನೀಕರಿಸುವಲ್ಲಿ ವಿಶ್ವೇಶ್ವರಯ್ಯನವರ ಪಾತ್ರ ಹಿರಿದಾಗಿತ್ತು. ಮೈಸೂರು ಸಂಸ್ಥಾನದ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಇವರು ವಿಶ್ವೇಶ್ವರಯ್ಯನವರ ಖ್ಯಾತಿಯನ್ನು ಮನಗಂಡು ಅವರ ಸೇವೆಯನ್ನು ಮೈಸೂರಿಗೆ ಬಳಸಿಕೊಳ್ಳಲು ಇಚ್ಛಿಸಿದಾಗ ವಿಶ್ವೇಶ್ವರಯ್ಯನವರು ಮೈಸೂರ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮತ್ತು ರಾಜ್ಯದ ಸರ್ವಾಂಗೀಣ ಪ್ರಗತಿಗಾಗಿ ನನ್ನ ಸೇವೆ ಮೀಸಲಿರುವುದಾಗಿ ತಿಳಿಸಿ,ಇದಕ್ಕೆ ಒಪ್ಪುವುದಾದರೆ ನನ್ನ ಸೇವೆ ಮೈಸೂರು ರಾಜ್ಯಕ್ಕೆ ಲಭ್ಯವೆಂದು ತಿಳಿಸಿದರು.ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ ಸಹ ಸಂಸ್ಥಾನದ ಅಭಿವೃದ್ಧಿ ಕುರಿತು ದೂರದೃಷ್ಠಿ ಹೊಂದಿದ್ದರಿಂದ ವಿಶ್ವೇಶ್ವರಯ್ಯನವರ ಬೇಡಿಕೆಗೆ ಒಪ್ಪಿದರು. ವಿಶ್ವೇಶ್ವರಯ್ಯನವರು 1909ರಲ್ಲಿ ಮೈಸೂರು ಸಂಸ್ಥಾನದ ಮುಖ್ಯ ಇಂಜೀಯರ ಆಗಿ ಸೇವೆ ಸಲ್ಲಿಸುತ್ತಿದ್ದರೂ,ಇವರು ತಮ್ಮ ವ್ಯಾಪ್ತಿಯನ್ನು ಮುಖ್ಯ ಇಂಜನೀಯರ ಹುದ್ದೆಗೆ ಸೀಮಿತಗೊಳಿಸದೇ ಮೈಸೂರು ಸಂಸ್ಥಾನದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ರೂಪಿಸುವಲ್ಲಿ ಕಾರಣೀಭೂತರಾದರು.ಇವರು ಮೈಸೂರು ಸಂಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಿ 1911 ರಲ್ಲಿ ಸಂಪದಭಿವೃದ್ಧಿ ಸಮ್ಮೇಳನ ವನ್ನು ಪ್ರಾರಂಭಿಸಿ ಸಂಸ್ಥಾನದ ಪ್ರಮುಖರೆಲ್ಲರನ್ನು ಸೇರಿಸಿ ರಾಜ್ಯದ ಸಂಪನ್ಮೂಲಗಳು,ಕೈಗಾರಿಕೆಗಳು ಇವುಗಳನ್ನು ಯಾವ ರೀತಿಯಲ್ಲಿ ಬಳಸಿಕೊಳ್ಳಬಹುದೆಂಬ ಬಗ್ಗೆ ಅಧ್ಯಯನ ಕೈಗೊಂಡರು.ತಂತ್ರಜ್ಞಾನ ಇಷ್ಟೊಂದು ಆಧುನಿಕರವಾಗಿರದ ಅಂದಿನ ಕಾಲದಲ್ಲಿಯೇ ಅವರು ನಿರ್ಮಿಸಿದ ಕರ್ನಾಟಕದ ಕೃಷ್ಣರಾಜ ಸಾಗರ ಆಣಿಕಟ್ಟು,ಬೃಂದಾವನ ಗಾರ್ಡನ,ಭದ್ರಾವತಿಯ ಉಕ್ಕಿನ ಕಾರ್ಖಾನೆ,ಮೈಸೂರು ಗಂಧದೆಣ್ಣೆ ಕಾರ್ಖಾನೆ ಮುಂತಾದವುಗಳ ಮೂಲಕ ವಿಶ್ವೇಶ್ವರಯ್ಯನವರು ಕರ್ನಾಟಕ್ಕೆ ಸರ್ವಾಂಗೀಣ ಪ್ರಗತಿಗೆ ಕಾರಣರಾದರು.ತಂತ್ರಜ್ಞಾನದ ಅದ್ಭುತಗಳನ್ನು ಭಾರತಕ್ಕೆ ಕೊಟ್ಟ ವಿಶ್ವೇಶ್ವರಯ್ಯನವರಿಗೆ ಬ್ರಿಟಿಷ ಸರಕಾರ ಸ್ವಾತಂತ್ರ್ಯ ಪೂರ್ವದಲ್ಲಿಯೇ ‘ನೈಟಹುಡ್’ ಪ್ರಶಸ್ತಿ ನೀಡಿತ್ತು. 1955 ರಲ್ಲಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆಂಗ್ಲರು ಭಾರತದ ಸಂಪತ್ತನ್ನು ದೋಚಿ ತಮ್ಮ ದೇಶಕ್ಕೆ ರವಾನೆ ಮಾಡಿ,ಅಲ್ಲಿ ಸಿದ್ಧಪಡಿಸಿದ ವಸ್ತುಗಳನ್ನು ಭಾರತಕ್ಕೆ ಮಾರಾಟ ಮಾಡಿ, ಭಾರತೀಯ ಗುಡಿ ಕೈಗಾರಿಕೆಗಳನನು ಸಂಪೂರ್ಣ ನಾಶಮಾಡಿ ತಮ್ಮ ಸರಕುಗಳಿಗೆ ಭಾರತವನ್ನು ಮಾರುಕಟ್ಟೆ ಮಾಡಿಕೊಂಡು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುತ್ತಿದ್ದರು. ಪರಿಸ್ಥಿತಿಯ ತೀವ್ರತೆಯನ್ನು ಅರಿತ ಸರ ಎಂ.ವಿ. ಬ್ರಿಟಿಷರ ವಿರೋಧದ ನಡುವೆಯೂ ಭಾರತೀಯ ಕೈಗಾರಿಕೆಗಳನ್ನು ಉಳಿಸಿ,ಬೆಳೆಸುವ ಹಲವಾರು ಯೋಜನೆಯನ್ನು ಕಾರ್ಯರೂಪಕ್ಕೆ ತಂದರು. ಉಕ್ಕಿನ ಕಾರ್ಖಾನೆಯಂತಹ ಬೃಹತ್ ಕೈಗಾರಿಕೆಗಳಿಗೆ ವಿಶ್ವ ಮಾನ್ಯತೆ ದೊರಕಿಸಿಕೊಡುವಲ್ಲಿ ಯಶಸ್ವಿಯಾದರು ಇಂತಹ ಮಾನವ ಕುಲ ಈ ದಿನವನ್ನು “ವಿಶ್ವ ಅಭಿಯಂತರ ದಿನ” ಎಂದೆ ಪರಿಗಣಿಸಿ ಅವರನ್ನು ಅವರ ಕಾಯಕ ನಿಷ್ಠತೆಯನ್ನು ನೆನಪಿಸಿಕೊಳ್ಳುತ್ತದೆ.ಆ ಮೂಲಕ ವಿಶ್ವದ ಮಹಾನ ಚೇತನಕ್ಕೆ ಈ ದಿನದ ಗೌರವ ಸಮಪಿರ್ತವಾಗಿದೆ.ಕನ್ನಡಿಗರ ಆರಾಧ್ಯ ದೈವ ಈ ಅಭಿಯಂತರರು ವಿಶ್ವೇಶ್ವರಯ್ಯನವರು. ನಾವೆಲ್ಲರೂ ಮಾಡುವ ಕಾಯಕದಲ್ಲಿ ಶಿಸ್ತು, ಸ್ವಯಮ,ಆದರ್ಶಗಳನ್ನು ಅಳವಡಿಸಿಕೊಂಡು ಅವಿರತವಾಗಿ ದುಡಿದು ಅವರ ಪಥದಲ್ಲಿ ಸಾಗೋಣ ಈ ಮೂಲಕ ಅವರಿಗೆ ಗೌರವ ನಮನಗಳನ್ನು ಸಲ್ಲಿಸೋಣ.  ಜಗತ್ತು ಸುತ್ತಿಕೊಂಡ ಮಹಾಮಾರಿಗೆ ಎಲ್ಲ ಉತ್ಸವ, ಹಬ್ಬ-ಹರಿದಿನಗಳು, ಜಾತ್ರೆ ನಿಬ್ಬಣಗಳು, ದಿನಾಚರಣೆ, ಜಯಂತಿಗಳು ಬೆರಳೆಣಿಕೆಯಷ್ಟು ಜನರ‌ ನಡುವೆ ಅತೀ ಸರಳವಾಗಿ ನಡೆಯುತ್ತಿವೆ.ಇದು ಇಂದಿನ ಕಾಲಘಟ್ಟದಲ್ಲಿ ತುಂಬಾ ಅನಿವಾರ್ಯ ಕೂಡ. ವಿಶ್ವಮಾನ್ಯ ವಿಶ್ವೇಶ್ವರಯ್ಯ ನವರ ದಿನಾಚರಣೆ ಕೂಡ ಸರಳವಾಗಿ ಆಚರಿಸಿ ಪುನೀತರಾಗೋಣ.ಎಲ್ಲರಿಗೂ ವಿಶ್ವ ಅಭಿಯಂತರ ದಿನಾಚರಣೆ ಶುಭಾಶಯಗಳು. ***************************************

ವಿಶ್ವ ಅಭಿಯಂತರರ ದಿನಾಚರಣೆ. Read Post »

ಇತರೆ, ಪ್ರಬಂಧ

ಆಡು ಭಾಷೆಯ ವೈಶಿಷ್ಟ್ಯತೆ

ಪ್ರಬಂಧ ಆಡು ಭಾಷೆಯ ವೈಶಿಷ್ಟ್ಯತೆ ಬಾಲಾಜಿ ಕುಂಬಾರ ನಮ್ಮ ಉತ್ತರ ಕರ್ನಾಟಕದ ಭಾಷೆಗೂ ದಕ್ಷಿಣ ಕನ್ನಡದ ಮಾತುಗಾರಿಕೆಗೂ ತುಂಬಾ ವ್ಯತ್ಯಾಸ ಕಾಣುತ್ತೇವೆ. ಉತ್ತರ ಕರ್ನಾಟಕದ ಮಂದಿ ಹೇಳಿ ಕೇಳಿ ತುಂಬಾ ಸೀದಾ ಸಾದಾ, ಭಾಳ ಮುಗ್ದ ಸ್ವಭಾವದ ಗಟ್ಟಿ ಜನ, ಬಿಳಿ ಜೋಳ ರೊಟ್ಟಿ , ಫುಂಡೆ ಪಲ್ಯ ಜೊತೆಗೆ ಉಳಾಗಡ್ಡೆ ಖಾರಾ, ಹಸಿ ಖಾರಾ ತಿಂದರೂ ‘ಇನ್ನೂ ಸ್ವಲ್ಪ ಸಪ್ಪಗೆ ಆಗ್ಯಾದ್ ಪಲ್ಯ’ ಎನ್ನುವ ಜವಾರಿ ಜನ, ಎಲ್ಲಿ ಹೋದರೂ ಏನಾದರೂ ಹೊಸತನ ಕಾಣುವುದು, ಹೊಸ ಕಲಿಕೆ, ಹೊಸ ಅಲೋಚನೆ , ವಿಶಿಷ್ಟ ಕಾರ್ಯಗಳಿಗೆ ಹೆಸರುವಾಸಿ ಜನ ಉತ್ತರ ಕರ್ನಾಟಕ ಮಂದಿ, ಹೀಗಾಗಿ ಉತ್ತರ ಕರ್ನಾಟಕ ಭಾಷೆ ಕೂಡ ಅಷ್ಟೇ ವೈವಿಧ್ಯಮಯ ಲವಲವಿಕೆಯಿಂದ ಕೂಡಿದೆ.  ಇಲ್ಲಿನ ಜನ ಹೊರಗಡೆ ಹೋಗಲು ಬಸ್ ರೈಲುಗಳಲ್ಲಿ ಪ್ರಯಾಣ ಮಾಡಬೇಕಾದರೆ ಪಕ್ಕದ ಸೀಟಿನಲ್ಲಿ ಕುಳಿತಿರುವ ದಕ್ಷಿಣ ಕನ್ನಡ ಭಾಗದವರಿಗೆ ನಾವು ಬೀದರ್ ನವರು ಎಂದು ಹೇಳಬೇಕಾಗಿಲ್ಲ.  ‘ಎಲ್ಲಿ , ಕಲ್ಲಿ, ಹೊಂಟಾನ, ಹೋಗ್ಯಾನ’ ಇಷ್ಟು ಸಾಕು, ಅವರು ಅನಾಮತ್ತಾಗಿ ನೀವು ಬೀದರ್ ದವರು ಅಲ್ಲವೇ? ಎಂದು ಕೇಳೇ ಬೀಡ್ತಾರೆ.  ಇನ್ನೂ ನಮ್ಮ ಬೀದರ್, ಮೊದಲೇ ಗಡಿನಾಡು ಜಿಲ್ಲೆ ,  ಆ ಕಡೆ ‘ಎಕ್ಕಡ’ ಎನ್ನುವ ಆಂಧ್ರ ಪ್ರದೇಶ, ಹಾಗೇ ಸ್ವಲ್ಪ ದೂರ ಹೋದರೆ ‘ರಂಡಿ, ಪೊಂಡಿ’ ಎಂದು ಮತ್ತು ತೆಲುಗುಮಾತನಾಡುವ ತೆಲಂಗಾಣ, ಈ ಕಡೆ ‘ಕಸ,ಕಾಯಿ, ಗೇಲಾ, ಏ ರೇ’ ಎನ್ನುವ ಮರಾಠಿ ಪದಗಳು, ‘ಕಲ್ ‘ ಎನ್ನುವ ಹಿಂದಿ ಪದ ಕನ್ನಡದಲ್ಲಿ ‘ಕಲ್ಲು’ ಎನ್ನುವ ಅರ್ಥ ಕೊಡುತ್ತದೆ, ಹೀಗೆ ಕನ್ನಡದವರಿಗೆ ವಿಭಿನ್ನ ಅರ್ಥಗಳಾಗಿ ಕಾಣುತ್ತವೆ.  ಬೀದರಿನ ಹೆಚ್ಚಿನ ಜನರು ತ್ರಿಭಾಷಾ ಪಾಂಡಿತ್ಯ ಉಳ್ಳವರು, ಕನ್ನಡ ನಾಡಿನ ಯಾವುದೇ ಭಾಗದಲ್ಲಿ ಹೋಗಿ, ನಾಲ್ಕೈದು ಕಿ.ಮೀ. ಗೊಂದು ಬದಲಾಗುವ ಭಾಷಾಶೈಲಿ, ಜನರ ಬದುಕು, ಕಲೆ, ಉಣ್ಣುವ ಅನ್ನ, ತೊಡುವ ಬಟ್ಟೆ ಎಲ್ಲವೂ ಭಿನ್ನ ವಿಭಿನ್ನ, ಇದೇ ನಮ್ಮ ನಾಡಿನ ವೈಶಿಷ್ಟ್ಯತೆ ಕನ್ನಡದ ಅಸ್ಮಿತೆ, ಹಸಿರು, ಉಸಿರು ಎಲ್ಲವೂ ಒಳಗೊಂಡಿದೆ.  ನಾವೊಮ್ಮೆ ಶಾಲಾ ಮಕ್ಕಳಿಗೆ ಮೈಸೂರು ಭಾಗದ ವಿವಿಧ ಕಡೆ ಪ್ರವಾಸಕ್ಕೆ ತೆಗೆದುಕೊಂಡು ಹೋಗಿದ್ದೇವು, ಆ ಭಾಗದ ಬಹುತೇಕ ಗ್ರಾಮ, ಪಟ್ಟಣಗಳ ಹೆಸರು ಓದಿಕೊಂಡು ನಮ್ಮ ಶಾಲಾ ಮಕ್ಕಳಿಗೆ ವಿಚಿತ್ರ  ಅನುಭವ ಹಾಗೂ ನಗುತ್ತಿದ್ದರು. ಹಾಗೇ ಬೀದರ್ ಜಿಲ್ಲೆಯಲ್ಲಿ ಒಂದು ಗ್ರಾಮದ ಹೆಸರು ‘ಹುಡುಗಿ’ ಅಂತ ಇದೆ, ಬೇರೆ ಭಾಗದವರು ಈ ಕಡೆ ಬಂದರೆ ಈ ‘ಹುಡುಗಿ’ ಎಲ್ಲಿ ಸರ್, ಇನೆಷ್ಟು ದೂರ ಸರ್ ಎಂದು ಕೇಳಿ ತುಂಬಾ ನಗಬಹುದು, ಆ ಕಡೆ ‘ಸೂಳೆಬಾವಿ’ ಎಂದು ಕೇಳಿ ನಗಬಹುದು, ಆದರೆ ಹಾಸ್ಯವಾಗಿ ಕಂಡರು ತನ್ನದೇ ಆದ ವೈವಿಧ್ಯಮಯ ಹೊಂದಿರುವ ಪ್ರದೇಶಗಳು ಎಂದು ಅರ್ಥೈಸಿಕೊಳ್ಳಬೇಕು. ಹಾಗೇ ಉತ್ತರ ಕರ್ನಾಟಕದ ತಿಂಡಿ ತಿನಿಸು, ಹೆಸರು, ಅಡ್ಡ ಹೆಸರು, ಮಾತು, ಬೈಗಳು ತುಂಬಾ ವಿಚಿತ್ರ, ಇಂಗ್ಲಿಷ್ ಬಾರದ ನಮ್ಮ ಹಳ್ಳಿಯ ಜನರೂ ಕೂಡ ಗ್ಲಾಸ್ ಬದಲಿಗೆ ‘ಗಿಲಾಸ್’ ಫೋಟೋ ಬದಲಿಗೆ ‘ಫೂಟೂ’ ಕೋಟೆಗೆ ‘ಕ್ವಾಟೀ’ ಮದುವೆಗೆ ‘ಮದಿ’ ಮುದುಕ ಬದಲು ‘ಮುದ್ಯಾ’ ಖರೀದಿ ಬದಲಾಗಿ ಖರ್ದಿ, ಬಟ್ಟೆ ಬದಲಿಗೆ ‘ಅರ್ಬಿ’ ಮಕ್ಕಳಿಗೆ ನಿಮ್ಗು ಎಷ್ಟು ‘ಪಾರುಗೋಳು’ ಎಂದು ಕೇಳುತ್ತಾರೆ.  ಒಮ್ಮೆ ಮಹಾರಾಷ್ಟ್ರದ ಒಂದು ಪ್ರವಾಸಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ಅಲ್ಲಿ ‘ಕಚರಾ ಕುಂಡಿ’ ಎಂದು ಮರಾಠಿಯಲ್ಲಿ ಬರೆದಿದ್ದು ನೋಡಿ ನಾವೇ ನಕ್ಕಿದ್ದೇವೆ. ಇಂತಹ ಬಹುತೇಕ ಮಿಶ್ರಿತ ಭಾಷೆ, ಅನ್ಯ ಭಾಷೆ, ವಿವಿಧ ಅರ್ಥಗಳಿಂದ ಕೂಡಿದ್ದು ಈ ನೆಲದ ವಿಶೇಷ ಎನ್ನಬಹುದು.  ತರಕಾರಿಗಳಿಗೂ ವಿಚಿತ್ರವಾಗಿ ಕರೀತಾರೆ, ಉಳಾಗಡ್ಡೆ ಬದಲು ‘ಉಳಗಡ್ಡಿ’ ಬೆಳ್ಳುಳ್ಳಿ ಬದಲು ‘ಬೆಳಗಡ್ಡಿ’ ಕೊತ್ತಂಬರಿ ಅನ್ನುವ ಬದಲು’ ಕೊತ್ಮೀರಿ, ಟಮೋಟೋ ಅನ್ನದೇ ‘ಟಮಾಟೆ ,ಟಮಟಾ’ ಮೌಂಸದ ಬದಲು ಇಗೊತ್ತು ಸಂಡೇ ಅದಾ ‘ಖಂಡಾ’ ತಿಂಬರೀ ಅಂತಾರೆ. ಶಾಲೆ ಅಂತೂ ಕರೆಯುವ ಅಪರೂಪದ ಜನರ ನಡುವೆ ಈವತ್ತು ‘ಸಾಳಿ’ ಅವನಾ ಸರ್’ ಎಂದೇ ಬಹಳಷ್ಟು ಜನ ಕೇಳುತ್ತಾರೆ. ಕೆಟ್ಟದ್ದಕ್ಕೆ ‘ಖರಾಬ್’ ಎಂದು, ಚಟಗಳಿಗೆ ‘ರಾಟಿ’ ಜೋಳಕ್ಕೆ ‘ಜ್ವಾಳಾ’, ಜ್ವರ ಬಂದರೆ ‘ಉರಿ’ ಬಂದವ ಎನ್ನುತ್ತಾರೆ.  ಇನ್ನೂ ಸಿಟ್ಟು ಬಂದಾಗ  ‘ಸುಳೆಮಗಾ’ ‘ಅಕ್ಕಲ್’  ಆ ಮಗಾ ಎಷ್ಟು ಹುಷಾರ್ ಆಗ್ಯಾನ್ ಅಂತ ‘ಜರಾ ತೋರ್ಸತಾ’ ಎನ್ನುತ್ತಾರೆ, ಮತ್ತೆ ಚಿಕ್ಕ ಮಕ್ಕಳಿಗೆ ಸಲುಗೆಯಿಂದ ‘ಹಲ್ಕಟ್ ಹಾಟ್ಯಾ’ ‘ಭಾಡಕಾವ್’ ‘ಮುಕುಡ್ಯಾ’ ಅವನ ‘ಇವ್ನ ಹೆಣ ಎತ್ಲಿ’ ಎಂದು ಪ್ರೀತಿಯಿಂದಲೇ ಬೈಯ್ತಾರೆ. ಹೀಗಾಗಿ ‘ಬೀದರ್ ಜಿಲ್ಲೆಯ ಬೈಗಳು’ ಎನ್ನುವ ಪುಸ್ತಕ ಬೀದರ್ ಭಾಷೆ ವೈಶಿಷ್ಟ್ಯತೆ ಬಿಂಬಿಸುತ್ತದೆ. ಇತ್ತೀಚೆಗೆ ಲಾಕ್ ಡೌನ್ ಸಂದರ್ಭದಲ್ಲಿ ‘ಲಂಗ್ ಡಂಗ್’ ‘ಲಾಕ್ ಡಾನ್’ ಮುಖ ಬದಲಿಗೆ ‘ಮೂತಿ’ ‘ಮಾರಿ’ ಮಾಸ್ಕ್ ಬದಲಿಗೆ ‘ಮುಸ್ಕಿ’ ಡ್ರೆಸ್ ಬದಲು ‘ಡಿರೇಸ್’ ‘ಸಾರಿ’ಗೆ ‘ಸೀರಿ’ ಒನ್ ಪ್ಲಾಟ್ ಜಾಗ ಎನ್ನದೇ ‘ಒಂದು ಪಿಲೇಟ್ ಜಾಗ’ ಎಂದು ಉಚ್ಚರಿಸುತ್ತಾರೆ. ಕನ್ನಡ ನಾಡಿನ ಇಂಗ್ಲಿಷ್ ಬಲ್ಲವರಿಗೆ ಇವೆಲ್ಲ ಹಾಸ್ಯ ಅನ್ನಿಸಬಹುದು, ಆದರೆ ತಾಯ್ನುಡಿಯವರು ಅವುಗಳನ್ನು ಉಚ್ಚರಿಸುವುದು ಬೇರೆ ರೀತಿ.  ಹೆಚ್ಚು ಕಾಡಿಸುವರನ್ನು ಕಂಡು ಅವನ ‘ಕಟ ಕಟಿ’ ಜಾಸ್ತಿ ಮತನಾಡಿದರೆ ಹೆಚ್ಚಿಗ್ ‘ತಿನ್ಕಬ್ಯಾಡ್’ ಅಂತಾರೆ, ಮೆಣಸಿನಕಾಯಿ, ಕತ್ತೆ, ಮೊಸರೆ, ತುಪ್ಪ, ಜೀರ್ಗೆ, ಉಳಾಗಡ್ಡೆ, ಲಂಗೋಟಿ, ಬ್ಯಾಳೆ ಎನ್ನುವ ಅಡ್ಡ ಹೆಸರುಗಳು ಈ ಪ್ರಾದೇಶಿಕ ವೈಶಿಷ್ಟ್ಯ ಹಾಗೂ ಪುರಾತನ ಸಂಸ್ಕೃತಿಯ ಸಂಕೇತವಾಗಿ ಗುರುತಿಸುತ್ತೇವೆ.  ಹಾಗೇ ನಮ್ಮ ಬೀದರ್ ಕಲ್ಬುರ್ಗಿ ಭಾಗದಲ್ಲಿ ಬಹುತೇಕ ಹಣ್ಣುಗಳಿಗೆ ಹಣ್ಣು ಎಂದು ಕರೆಯುವ ಬದಲಿಗೆ ಕಾಯಿ ಎಂದೇ ಉಚ್ಚರಿಸುತ್ತಾರೆ. ಮಾವಿನಕಾಯಿ, ಬಾಳೆಕಾಯಿ, ಕ್ಯಾರೆಕಾಯಿ ಎನ್ನುತ್ತಾರೆ. ಸೀತಾಫಲ ಹಣ್ಣಿಗೆ ಚಿಪ್ಪುಲಕಾಯಿ, ನೆರಳೆ ಹಣ್ಣಿಗೆ ನೆಳ್ಳೆಕಾಯಿ ಕರೆಯುತ್ತಾರೆ,  ಹೆಜ್ಜೆ ಹೆಜ್ಜೆಗೂ ಭಾಷಾ ಭಿನ್ನತೆ ಮಾತಿನ ಉಚ್ಚಾರದಲ್ಲಿ ವ್ಯತ್ಯಾಸ, ವಿವಿಧ ಅರ್ಥದಲ್ಲಿ ವ್ಯತ್ಯಾಸಗಳು ಕಂಡುಬರುತ್ತವೆ. ರೊಟ್ಟಿ- ಗಿಟ್ಟಿ, ಬ್ಯಾಳಿ- ಗೀಳಿ, ಎನ್ನುವ ಹಲವು ವಿಭಿನ್ನತೆಗಳು ಇರುವಾಗ ಈ ಕೆಲವರು ಕೊತ್ತುಂಬರಿಗೆ ಕೊತ್ಮೀರಿ ಎನ್ನುವುದು ಏನು ದೊಡ್ಡ ವಿಷಯವೇ ಆಗಬೇಕಿರಲಿಲ್ಲ‌. ಚಂದಿರನಿಗೆ ‘ಚಂದಮಾಮ’, ಭೂಮಿಗೆ ‘ತಾಯಿ’, ನೀರಿಗೆ ‘ದೇವತೆ’ ಎಂದು ಪೂಜಿಸುತ್ತಾರೆ. ಇನ್ನೂ ಅನೇಕ ವ್ಯಕ್ತಿಗಳ ಹೆಸರುಗಳು ಕೂಡ ಆಯಾ ಪ್ರಾದೇಶಿಕ ಪರಂಪರೆ, ಐತಿಹಾಸಿಕ ಹಿನ್ನೆಲೆಯನ್ನು ಪ್ರತಿಬಿಂಬಿಸುತ್ತವೆ. ಉತ್ತರ ಕರ್ನಾಟಕ ಭಾಗದಲ್ಲಿ ಬಸವಾದಿ ಶರಣರ ಪ್ರಭಾವ ಹೆಚ್ಚಿದೆ, ಬಸಪ್ಪ , ಶರಣಪ್ಪ, ಕಲ್ಲಪ್ಪ, ಮಹಾದೇವಿ, ಶರಣಮ್ಮ, ಹೀಗೆ ಪಟ್ಟಿ ಬೆಳೆಯುತ್ತದೆ. ಇನ್ನೂ ಒಂದು ವಿಚಿತ್ರ ಎಂದರೆ ಕೃಷಿಕರು ಹೊಲದಲ್ಲಿ ಕೆಲಸಕ್ಕೆ ಹೋದಾಗ ಮಗು ಜನನ ಆಗಿರುವ ಕಾರಣಕ್ಕೆ ಅಡೆಪ್ಪಾ, ಹುಲ್ಲಪ್ಪ ಎನ್ನುವ ಹೆಸರುಗಳು ಉಂಟು, ದೇವರ ಹೆಸರುಗಳೇ ತಮ್ಮ ಮಕ್ಕಳಿಗೆ ಹೆಸರಿಡುವ ಪರಂಪರೆ ನಮ್ಮ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ ಎಂದು ಹೇಳಬಹುದು. ಸಮಾಜದಲ್ಲಿ ಕೊರೊನಾ ವೈರಸ್ ಗಿಂತಲೂ ಭೀಕರ ಮತ್ತು ಅಷ್ಟೇ ಮಾರಕವಾಗಿ ಹರಡಿರುವ ‘ಕೋಮು ವೈರಸ್ ‘ ಈಗ ಬಹುತೇಕ ಮೆದುಳುಗಳ ಒಳಹೊಕ್ಕಿ ಕೊಳೆತು ನಾರುತ್ತಿದೆ. ಹಳ್ಳಿಗಾಡಿನ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಬಸಪ್ಪ – ಬಶೀರ್ ಅವರಿಗೆ ಯಾವುದೇ ಜಾತಿ ಧರ್ಮಗಳಿಲ್ಲ, ತಮ್ಮನ್ನು ತಾವು ಭಾಯಿ – ಭಾಯಿಗಳಾಗಿ ಅನ್ಯೋನ್ಯತೆ ಬೆಳೆಸಿಕೊಂಡು ಬದುಕುತ್ತಿದ್ದಾರೆ. ರಕ್ತ ಸಂಬಂಧಗಳು ಇರದೇ ಇರುವ ಮುಸ್ಲಿಂ ಸಹೋದರು ಹಿಂದೂ ಸಹೋದರಿಯರಿಗೆ ಅವ್ವ, ಸಣ್ಣಪ್ಪಾ, ದೊಡ್ಡಪ್ಪ , ಕಾಕಾ ಎಂದು ಆಪ್ತವಾದ ಸಂಬಂಧ ಹೊಂದಿದ್ದಾರೆ. ಹೀಗಾಗಿ ಹಳ್ಳಿಗಾಡಿನಲ್ಲಿ ಇಂದಿಗೂ ಜಾತಿ ಧರ್ಮಗಳ ಚೌಕಟ್ಟ ಮೀರಿ ಸೌಹಾರ್ದತೆ ಪ್ರೀತಿಯೇ ಉಸಿರಾಡುತ್ತಿದೆ.  ಆಡು ಭಾಷೆಯ ಆಳ ಯಾರಿಗೂ ನಿಲುಕಲು ಸಾಧ್ಯವಿಲ್ಲ, ಅದರ ವ್ಯಾಪ್ತಿ ವಿಶಾಲವಾಗಿ ಬೇರೂರಿದೆ. ಇದುವೇ ಕನ್ನಡ ನಾಡಿನ ವಿಶೇಷ ಗಮ್ಮತ್ತು, ಇದರೊಳಗೆ ಅಡಗಿದೆ ಕನ್ನಡತನದ ತಂಪು, ಇಂಪು, ಉಸಿರು, ಹಸಿರು… ಎಲ್ಲವೂ…ಹೌದಲ್ಲವೇ..? *************************************************

ಆಡು ಭಾಷೆಯ ವೈಶಿಷ್ಟ್ಯತೆ Read Post »

You cannot copy content of this page

Scroll to Top