ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ..!

ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ..! ಈಗ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆ ನಡೆಬೇಕಿದೆ. ಪ್ರಸ್ತವಾಗಿ ಮ.ನು.ಬಳೆಗಾರರ ಅವಧಿ ಮುಗಿದಿದೆ. ಅದಕ್ಕಾಗಿ ಈಗಾಗಲೇ ತಯ್ಯಾರಿಯೂ ನಡೆದಿದೆ. ಹಾಗಾದರೆ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿಯನ್ನು ಅವಲೇಕಿಸೋಣ..! ಬ್ರಿಟಿಷ್‌ ಸರ್ಕಾರದ ಆಡಳಿತಕ್ಕೆ ಒಳಪಟ್ಟಿದ್ದ ಮದ್ರಾಸ್‌, ಮುಂಬೈ ಪ್ರಾಂತ್ಯಗಳಲ್ಲಿ ದ್ವೀಪಗಳಂತೆ ಸೊಂಡೂರು, ಸವಣೂರು, ರಾಮದುರ್ಗ ಮುಂತಾದ ಹಿರಿಯ, ಕಿರಿಯ ಸಂಸ್ಥಾನಗಳು ಇದ್ದವು. ಕನ್ನಡ ಜನ ಭಿನ್ನ ಭಿನ್ನ ಆಡಳಿತ ಘಟಕಗಳ ಹಿಡಿತದಲ್ಲಿದ್ದರೂ ಅವರು ಆಡುತ್ತಿದ್ದ ಕನ್ನಡ ಭಾಷೆಯ ಮೇಲೆ ಅನ್ಯ ಭಾಷಾ ಪ್ರಭಾವ ಬಿದ್ದು, ಉಚ್ಚಾರಣೆಯಲ್ಲಿ ವ್ಯತ್ಯಾಸಗಳು ಉಂಟಾಗಿದ್ದವು. ಇವುಗಳ ಪರಿಣಾಮವಾಗಿ ವಿವಿಧ ಪ್ರದೇಶಗಳ ಕನ್ನಡಿಗರು ಅಪರಿಚಿತರಂತೆ ವ್ಯವಹರಿಸುವ ಅಸ್ವಾಭಾವಿಕ ಪರಿಸ್ಥಿತಿ ಉಂಟಾಗಿತ್ತು. ಆಗ ಮೈಸೂರು ಸಂಸ್ಥಾನದ ಅಂದಿನ ದಿವಾನರಾಗಿದ್ದ ಸರ್‌.ಎಂ.ವಿಶ್ವೇಶ್ವರಯ್ಯನವರು ಕನ್ನಡ ಭಾಷೆ, ಸಂಸ್ಕೃತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಅವಶ್ಯಕತೆಗಾಗಿ ‘ಮೈಸೂರು ಸಂಪದಭ್ಯುದಯ ಸಮಾಜ’( ಮೈಸೂರು ಎಕನಾಮಿಕ್‌ ಕಾನ್ಫರನ್ಸ್‌ ) ರಚಿಸಿದರು. ವಿದ್ಯಾವಿಷಯಗಳಿಗಾಗಿ ಸಂಬಂಧಪಟ್ಟಂತೆ ವಿದ್ಯಾವಿಷಯಕ ಮಂಡಳಿ ರೂಪಿಸಿ, ಆ ಜವಾಬ್ದಾರಿಯನ್ನು ಹೆಚ್‌.ವಿ.ನಂಜುಂಡಯ್ಯನವರಿಗೆ ವಹಿಸಿದರು. ಮೈಸೂರು ಸಂಪದಭ್ಯುದಯ ಸಮಾಜವು 03.10.1914ರ ವಾರ್ಷಿಕ ಅಧಿವೇಶನದಲ್ಲಿ, ಕರ್ನಾಟಕ ಭಾಷೆಯಲ್ಲಿ ವಿವಿಧ ಗ್ರಂಥಗಳನ್ನು ರಚಿಸಿರುವವರನ್ನ ಪ್ರೋತ್ಸಾಹಿಸಲು ನಿರ್ಧರಿಸಿತು. ಈ ನಿಟ್ಟಿನಲ್ಲಿ ತನ್ನ ವಿದ್ಯಾವಿಷಯಕ ಮಂಡಳಿಯ ಮೂಲಕ ಒಂದು ಉಪಸಮಿತಿಯನ್ನು ರಚಿಸಿತು. ಉಪಸಮಿತಿಯು ಕನ್ನಡ ಭಾಷಾ ಸಾಹಿತ್ಯದ ಅಭಿವೃದ್ಧಿ ಮಾರ್ಗವನ್ನು ಕುರಿತು ಸಲಹೆ ಪಡೆಯಲು ತೀರ್ಮಾನಿಸಿ ಐದು ಭಾಗಗಳಾಗಿ ವಿಂಗಡಿಸಿತು. 1) ಕನ್ನಡ ನಾಡಿನ ಬೇರೆ ಬೇರೆ ಭಾಗಗಳಲ್ಲಿರುವ ಭಾಷಾ ಭಿನ್ನರಲ್ಲಿ ಐಕ್ಯಮತವನ್ನು ಪರಸ್ಪರ ಸೌಹಾರ್ದವನ್ನು ಹೆಚ್ಚಿಸುವುದಕ್ಕಾಗಿ ಉತ್ತಮೋತ್ತಮ ಉಪಾಯಗಳನ್ನು ನಿರ್ಧರಿಸುವುದು. 2) ಕನ್ನಡ ನಾಡಿನ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರದಲ್ಲಿರುವ ಗ್ರಾಂಥಿಕ ಭಾಷೆಯನ್ನು ಒಂದೇ ರೂಪಕ್ಕೆ ತರಲು ತಕ್ಕ ಮಾರ್ಗಗಳನ್ನು ನಿಶ್ಚಯಿಸುವುದು. 3) ಕನ್ನಡವನ್ನು ಓದುವ ವಿದ್ಯಾರ್ಥಿಗಳಿಗೆ ಎಲ್ಲಾ ವಿದ್ಯಾ ಶಾಲೆಗಳಲ್ಲಿ ಪಠ್ಯಪುಸ್ತಕಗಳು ಒಂದೇ ಆಗಿರುವುದಕ್ಕೆ ಬೇಕಾದ ಪ್ರಯತ್ನಗಳನ್ನುಮಾಡುವುದು. 4) ಕನ್ನಡವನ್ನಾಡುವ ಜನಸಾಮಾನ್ಯರಲ್ಲಿ ಲೋಕ ವ್ಯವಹಾರ ಜ್ಞಾನವು ಹರಡುವಂತ ತಕ್ಕ ಪುಸ್ತಕಗಳನ್ನು ಬರೆಯಿಸಿ, ಪ್ರಚಾರ ಮಾಡುವುದಕ್ಕೆ ಸಾಧಕವಾದ ಉತ್ತಮೋತ್ತಮ ಉಪಾಯಗಳನ್ನು ನಿರ್ಣಯಿಸುವುದು. 5) ಕನ್ನಡದಲ್ಲಿ ಬರೆಯುವ ಭೌತಿಕವಾದ ನಾನಾ ಶಾಸ್ತ್ರಗಳನ್ನು ಪ್ರಯೋಗಿಸಬೇಕಾದ ಪಾರಿಭಾಷಿಕ ಶಬ್ದಗಳನ್ನು ನಿರ್ಣಯಿಸುವುದಕ್ಕೆ ತಕ್ಕ ಉತ್ತಮೋತ್ತಮ ಉಪಾಯಗಳನ್ನು ಪರಿಶೀಲಿಸುವುದು. ಮೇಲ್ಕಡ ಐದು ವಿಷಯಗಳ ಕುರಿತು ಸಲಹೆ ರೂಪದಲ್ಲಿ ಲೇಖನಗಳನ್ನು ಬರೆದು ಕಳುಹಿಸುವಂತೆ ಆಹ್ವಾನಿಸಿದರು. ಆಗ ವಿದ್ವಾಂಸರು, ಸಾಹಿತಿಗಳು ಉತ್ಸಾಹದ ಪ್ರತಿಕ್ರಿಯೆ ತೋರಿಸಿ ಅಮೂಲ್ಯವಾದ ಸಲಹೆ ಸೂಚನೆಗಳನ್ನು ಕಳುಹಿಸಿದರು. ಆಗ ಉಪಸಮಿತಿಯು ಮೇ 3 ಬೆಂಗಳೂರಿನಲ್ಲಿ ಒಂದು ಸಮ್ಮೇಳನವನ್ನು ನಡೆಸಬೇಕೆಂದು ನಿರ್ಧರಿಸಿ ಸಮ್ಮೇಳನದ ಏರ್ಪಾಡು ಮಾಡಿತು. 03.05.1915ರಂದು ಬೆಂಗಳೂರಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸಮ್ಮೇಳನ ನಡೆಯಿತು. ಸಮ್ಮೇಳನಕ್ಕೆ ಕರ್ನಾಟಕದ ನಾನಾ ಪ್ರಾಂತ್ಯಗಳಿಂದ ಪ್ರಮುಖ ವಿದ್ವಾಂಸರು ಮತ್ತು ಪತ್ರಿಕೆಗಳ ಸಂಪಾದಕರು ಆಗಮಿಸಿದ್ದರು. ನಂತರ ಸಭೆಯಲ್ಲಿ ನೆರೆದಿದ್ದ ಪತ್ರಿಕೆ ಸಂಪಾದಕರು, ವಿದ್ವಾಂಸರು ಮತ್ತು ಮಹಾಜನಗಳು ರಾಜ್ಯ ಮಂತ್ರಿ ಪ್ರವೀಣ ಹೆಚ್‌.ವಿ.ನಂಜುಂಡಯ್ಯನವರನ್ನು ಅಧ್ಯಕ್ಷರಾನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದರು. ನಂತರ ಸಮ್ಮೇಳನದಲ್ಲಿ ಈ ಕೆಳಗಿನ ಮುಖ್ಯ ಉದ್ದೇಶಗಳನ್ನು ಪ್ರಕಟಿಸಿಸಲಾಯಿತು. ಕರ್ನಾಟಕ ಭಾಷಾ ಸಂಸ್ಕರಣಕ್ಕಾಗಿ ಮತ್ತು ಕರ್ನಾಟಕ ಗ್ರಂಥಾವಳಿಯ ಅಭಿವೃದ್ಧಿಗಾಗಿ ಬೆಂಗಳೂರಿನಲ್ಲಿ ‘ಕರ್ನಾಟಕ ಸಾಹಿತ್ಯ ಪರಿಷತ್’ ಎಂಬ ಹೆಸರಿನೊಡನೆ ಪ್ರಧಾನ ಸಭೆಯಾಂದು ಸ್ಥಾಪಿತವಾಗಬೇಕು. ಮುಂಬೈ, ಮದ್ರಾಸ್‌, ಹೈದರಾಬಾದ್‌,ಕೊಡಗು ಪ್ರಾಂತ್ಯಗಳಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತು ಉದಯವಾಯಿತು. ಇದರ ಉದ್ದೇಶ ಕನ್ನಡ ಭಾಷೆ, ಸಾಹಿತ್ಯ,ಕಲೆ, ಸಂಸ್ಕೃತಿ, ಇತಿಹಾಸ ಇವುಗಳ ರಕ್ಷಣೆ ಹಾಗೂ ಅಭಿವೃದ್ಧಿ ಮುಖ್ಯ ಉದ್ದೇಶವಾಗಿತು. ಪರಿಷತ್ತು ಸ್ಥಾಪನೆಯಾದಾಗಿನಿಂದ ಐದು ವರ್ಷ (1915-1920)ಗಳ ಕಾಲ ಹೆಚ್‌.ವಿ.ನಂಜುಂಡಯ್ಯನವರು ಅಧ್ಯಕ್ಷರಾಗಿ ಪರಿಷತ್ತಿನ ಮುನ್ನಡೆಗೆ ದಾರಿ ಮಾಡಿಕೊಟ್ಟರು. ಹೆಚ್‌.ವಿ.ನಂಜುಂಡಯ್ಯನವರು ಕಾಲವಾದ ನಂತರ 1947ರವರೆಗೆ ರಾಜ ಮನೆತನದವರಿಗೆ ಅಧ್ಯಕ್ಷ ಸ್ಥಾನ ಸೀಮಿತವಾಗಿತ್ತು. 12.04.1937ರಂದು ಪರಿಷತ್ತಿನ ಉಪಾಧ್ಯಕ್ಷರಾದ ಕರ್ಪೂರ ಶ್ರೀನಿವಾಸರಾಯರು ಪರಿಷತ್ತಿನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಕಟ್ಟಡ ನಿರ್ಮಾಣ ಪೂರ್ಣಗೊಂಡು 29.05.1938ರಂದು ಶ್ರೀ ಕೃಷ್ಣರಾಜ ಪರಿಷನ್ಮಂದಿರ ಉದ್ಘಾಟನೆಯಾಯಿತು. 1935 ರಲ್ಲಿ ಸಾಹಿತ್ಯ ಸಮ್ಮೇಳನದ ವೇಳಾಪಟ್ಟಿಯನ್ನು ಪ್ರಕಟಿಸಿ, ಪ್ರತಿ ವರ್ಷವು ಡಿಸೆಂಬರ್‌ ತಿಂಗಳ ಕಡೇ ವಾರದಲ್ಲಿ ಸಮ್ಮೇಳನ ನಡೆಸಬೇಕೆಂದು, ಸ್ವಾಗತ ಮಂಡಳಿ ಯೋಜನೆ, ಆಹ್ವಾನ ಸ್ವೀಕಾರ, ಅಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚನೆ, ಸಮ್ಮೇಳನ ದಿನಾಂಕ ಗೊತ್ತುಪಡಿಸುವುದು, ಪ್ರಬಂಧಕರು, ನಿರ್ಣಯ ಸೂಚಕರು, ಉಪನ್ಯಾಸಕರು ಗೊತ್ತುಪಡಿಸುವುದು ಪ್ರಬಂಧ ಸಂಗ್ರಹಗಳು, ಸೂಚನೆಗಳ ಮುದ್ರಣ ಕಾರ್ಯಗಳ ಬಗ್ಗೆ ವೇಳಾಪಟ್ಟಿಯನ್ನು ತಯಾರು ಮಾಡಿತು. 1938ರಲ್ಲಿ ಕನ್ನಡನಾಡಿನ ನಕ್ಷೆಯಲ್ಲಿ ಪರಿಷತ್ತಿನ ಲಾಛನವನ್ನು (‘ಸಿರಿಗನ್ನಡಂ ಗೆಲ್ಗೆ, ಕನ್ನಡ ಸಾಹಿತ್ಯಪರಿಷತ್‌’) ಬಿ.ಎಂ.ಶ್ರೀಕಂಠಯ್ಯನವರು ರೂಪಿಸಿದರು. 1938 ಡಿಸೆಂಬರ್‌ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆದ 23 ನೇ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತು ಎಂಬ ಹೆಸರಿನ ಬದಲಿಗೆ ‘ಕನ್ನಡ ಸಾಹಿತ್ಯ ಪರಿಷತ್’ ಎಂಬ ನಾಮಕರಣಗೊಂಡಿತು. ಬಿ.ಎಂ.ಶ್ರೀಕಂಠಯ್ಯನವರು ಉಪಾಧ್ಯಕ್ಷರಾಗಿದ್ದಾಗ (1938-1942) ಪರಿಷತ್ತಿಗೆ ಭದ್ರ ಬುನಾದಿ ಹಾಕಿದರು. ಮಹಿಳಾ ಶಾಖೆ ಪರಿಷತ್ತಿನ ಮುದ್ರಣಾಲಯ, ಕನ್ನಡ ನುಡಿ ಪತ್ರಿಕೆ. ಸಾಹಿತ್ಯ ಪರೀಕ್ಷೆಗಳು, ಗ್ರಂಥ ಪ್ರಕಟಣೆ, ಮಾರಾಟ ಮತ್ತು ಬೆಳ್ಳಿ ಹಬ್ಬದ ಆಚರಣೆ ಹಾಗೂ ಕನ್ನಡದ ಬಾವುಟದ ಪ್ರಕಟಣೆಗಳ ಕಾರ್ಯಗಳೂ ಪರಿಷತ್ತಿನ ಮುನ್ನಡೆಗೆ ಸಹಾಯಕವಾದವು. ದಿನಾಂಕ 29.12.1948 ರಂದು ಕಾಸರಗೋಡಿನಲ್ಲಿ ನಡೆದ 31ನೇ ಪರಿಷತ್ತಿನ ಸಭೆಯಲ್ಲಿ ಮುಂದೆ ಉಪಾಧ್ಯಕ್ಷರ ಹುದ್ಧೆ ರದ್ದುಪಡಿಸಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೇ ಪರಿಷತ್ತಿನ ಅಧ್ಯಕ್ಷರಾಗಬೇಕೆಂದು ಜಾರಿಗೆ ತಂದರು. ದಿನಾಂಕ 24.05.1950 ರಂದು ಸೊಲ್ಲಾಪುರದಲ್ಲಿ ನಡೆದ 33ನೇ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರ ಅವಧಿಯನ್ನು 3ವರ್ಷವೆಂದು ತೀರ್ಮಾನ ತೆಗೆದುಕೊಂಡು ಪರಿಷತ್ತು ಆದೇಶ ಹೊರಡಿಸಿತು. ಮೈಸೂರಿನ ಮುಖ್ಯಮಂತ್ರಿಗಳಾದ ಕೆಂಗಲ್‌ ಹನುಮಂತಯ್ಯನವರು ತಮ್ಮ ಸರ್ಕಾರದಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗಾಗಿ ಒಂದು ಇಲಾಖೆಯನ್ನು ಪ್ರಾರಂಭಿಸಿದರು. (ಈಗಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ) 1956ರ ನವೆಂಬರ್‌ 1ರಂದು ಮೈಸೂರನ್ನು ಏಕೀಕರಣಗೊಳಿಸಿದರು.‘ಕಪ್ಪು ನಾಡಿನ ನಾಡು, ಆಡುವ ಭಾಷೆ ಕನ್ನಡ ಹಾಗಾಗಿ ’ ‘ಕರ್ನಾಟಕ’ ಎಂದು ನಾಮಕರಣ ಮಾಡಬೇಕೆಂದು ದೇವರಾಜ ಅರಸ್‌ 1972ರಲ್ಲಿ ಮುಖ್ಯ ಮಂತ್ರಿಯಾದಾಗ ಶಿಫಾರಸ್ಸು ಮಾಡಿದರು. ಅದರಂತೆ ಅಂದಿನಿಂದ ‘ಕರ್ನಾಟಕ ’ ರಾಜ್ಯವಾಯಿತು. 1976 ರಲ್ಲಿ ಶಿವಮೊಗ್ಗದಲ್ಲಿ ನಡೆದ 49ನೇ ಸಾಹಿತ್ಯ ಸಮ್ಮೇಳನದಿಂದ ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ ಎಂದು ಕರೆಯಲಾಯಿತು. 1977 ರ ಏಪ್ರಿಲ್‌ 23 ರಿಂದ 28 ರವರೆಗೆ 6 ದಿನಗಳ ಕಾಲ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಅನೇಕ ವೈಶಿಷ್ಟ್ಯಗಳಿಂದ ನಡೆಸಿತು. 1978ರಲ್ಲಿ 50ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾರತದ ರಾಜಧಾನಿಯಾದ ನವದೆಹಲಿಯಲ್ಲಿ ನಡೆಸಿ ಕನ್ನಡದ ಇತಿಹಾಸವನ್ನು ದೇಶಕ್ಕೆ ಪಸರಿಸಿತು. ಈ ಸಮ್ಮೇಳನದ ಉದ್ಘಾಟನೆಯನ್ನು ಭಾರತದ ಆಗಿನ ಪ್ರಧಾನಮಂತ್ರಿ ಮೊರಾರ್ಜಿ ದೇಸಾಯಿ ನಡೆಸಿಕೊಟ್ಟರು. ಪರಿಷತ್ತಿನ ಅವ್ಯವಹಾರ ನಡೆದಿದೆ ಎಂಬ ವಿಷಯ ಬೆಳಕಿಗೆ ಬಂದು ಆಡಳಿತಾಧಿಕಾರಿಯನ್ನು ದಿನಾಂಕ 12.11.1987 ರಂದು ಸರ್ಕಾರ ನೇಮಿಸಿತು. ಮೂರು ವರ್ಷಗಳ ನಂತರ ಆಡಳಿತಾಧಿಕಾರಿಯನ್ನು ತೆಗೆದು ಹೊಸ ನಿಯಮದ ಪ್ರಕಾರ 2.2.1989ರಂದು ಚುನಾವಣೆ ನಡೆದು ಜಿ.ಎಸ್‌.ಸಿದ್ದಲಿಂಗಯ್ಯನವರು 17ನೇ ಪರಿಷತ್ತು ಅಧ್ಯಕ್ಷರಾದರು. 1915 ರಂದು ಒಂದು ಸಭೆ ಮುಖಾಂತರ ಪ್ರಾರಂಭವಾದ ಸಮ್ಮೇಳನ, ನಂತರ ಒಂದು ಪರಿಷತ್ತನ್ನು ಹೊಂದಿ, ಸ್ವಂತ ಕಟ್ಟಡಗಳನ್ನು ಕಟ್ಟಿಸಿಕೊಂಡು ಸರ್ಕಾರದಲ್ಲಿ ಒಂದು ಇಲಾಖೆಯನ್ನೇ ಸ್ಥಾಪಿಸಿಕೊಂಡು ಬೆಳ್ಳಿ ಹಬ್ಬ, ವಜ್ರ ಮಹೋತ್ಸವ, ಅಮೃತಮಹೋತ್ಸವ ಹಾಗೂ ಸುಮಾರು ಸಾವಿರಾರು ಪುಸ್ತಕಗಳ ಪ್ರಕಟಣೆ, ಕವಿ, ಕಾವ್ಯ, ವಿಚಾರ ಸಂಕಿರಣ, ಸಾಹಿತ್ಯ ಕಮ್ಮಟಗಳು, ಸಂಶೋಧನಾ ಕೇಂದ್ರಗಳು, ರಂಗ ಸ್ಪರ್ಧೆಗಳು, ಸಾಹಿತ್ಯ ಪರೀಕ್ಷೆಗಳನ್ನು ನಡೆಸಿಕೊಂಡು ಬರುತ್ತಾ ಇದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪರಿಷತ್ತುಗಳನ್ನು ತೆರೆದು ಜಿಲ್ಲಾ ಮಟ್ಟದ ಪರಿಷತ್ತುಗಳಿಗೆ ಜಿಲ್ಲಾ ಪಂಚಾಯ್ತಿಯಿಂದ ಹಣದ ಸಹಾಯ ನೀಡುವಂತೆ ಮಾಡಿದೆ. ಜಿಲ್ಲಾ ಮಟ್ಟದಲ್ಲಿ ಸಮ್ಮೇಳನಗಳನ್ನು ನಡೆಸುತ್ತಾ ಬರುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವೈವಿಧ್ಯಮಯ ಸಾಹಿತ್ಯದ ವಿಷಯಗಳನ್ನು ಕುರಿತು ಗೋಷ್ಠಿಗಳು, ಪ್ರಬಂಧ ಮಂಡನೆ, ಚರ್ಚೆಗಳು, ಭಾಷೆ ಮತ್ತು ಸಂಸ್ಕೃತಿಗಳ ಚರ್ಚಾಕೂಟ, ಪುಸ್ತಕಗಳ ಪ್ರಕಟಣೆ ಮತ್ತು ಬಿಡುಗಡೆ, ವಿದ್ವಾಂಸರು ಸಾಹಿತಿಗಳು ಜನಪ್ರತಿನಿಧಿಗಳಿಂದ ಭಾಷೆ, ನಾಡಿನ ಬಗ್ಗೆ ಚಿಂತನೆ ನಡೆಸುತ್ತಾ ಬರುತ್ತಿದೆ. ಸಾಹಿತಿಗಳಿಗೆ, ಕವಿಗಳಿಗೆ, ಕನ್ನಡದ ಜನತೆಗೆ ಹಬ್ಬದ ವಾತಾವರಣವನ್ನು ನಿರ್ಮಿಸಿ ಜ್ಞಾನರ್ಜನೆಯನ್ನು ನೀಡುತ್ತಾ ಬಂದಿದೆ. ಖ್ಯಾತ ಸಾಹಿತಿಗಳು, ಕವಿಗಳನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲು ಪರಿಷತ್ತು ಒಂದು ನಿಯಮವನ್ನು ಹಾಕಿಕೊಂಡು ಬರುತ್ತಿದೆ. ಪ್ರಸ್ತುತವಾಗಿ ಸದ್ಯ ಹಿರಿಯ  ನಿವೃತ್ತ ಐ.ಎ.ಎಸ್ ಅಧಿಕಾರಿ ಮ.ನು.ಬಳೆಗಾರರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಈವರೆಗೆ ಕನ್ನಡದ ಕೆಲಸ ಮಾಡಿದರು. ಬರುಬರುತ್ತ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಸಾಹಿತಿಗಳೇ ಅಧ್ಯಕ್ಷ್ಯರಾಗುತ್ತ ಬರುವಂತಾಯಿತು. ಈಗ ಮ.ನು.ಬಳೆಗಾರರ ಅವಧಿಯೂ ಮುಗಿಯಿತು. ಸದ್ಯ ಚುನಾವಣೆ ನಡೆಯಬೇಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಈಗ..! ಈ ವರೆಗಿನ ಅಧ್ಯಕ್ಷರು– ಅವರು ಹೀಗಿದ್ದಾರೆ–     ಶ್ರೀ ಎಚ್. ವಿ. ನಂಜುಂಡಯ್ಯ – 1915-1920     ಸರ್. ಎಂ. ಕಾಂತರಾಜ ಅರಸ್ – 1920-1923     ಶ್ರೀ ಕಂಠೀರವ ನರಸಿಂಹರಾಜ ಒಡೆಯರ್ ಬಹದ್ದೂರ್ – 1924 – 1940     ಶ್ರೀ ಜಯಚಾಮರಾಜ ಒಡೆಯರ್ ಬಹದ್ದೂರ್ – 1940-1943     ಶ್ರೀ ಬಸವಪ್ರಭು ರಾಜಾ ಲಖಮನಗೌಡ ಸರದೇಸಾಯಿ ಬಹದ್ದೂರ್ – 1941-1946     ಶ್ರೀ ಲೋಕೂರ್ ನಾರಾಯಣರಾವ್ ಸ್ವಾಮಿರಾವ್ – 8-6-1947 ರಿಂದ 29-12-1947     ಶ್ರೀ ತಿರುಮಲೆ ತಾತಾಚಾರ್ಯ ಶರ್ಮ – 29-12-1947 ರಿಂದ 6-3-1949     ಶ್ರೀ ರೆವರೆಂಡ್ ಉತ್ತಂಗಿ ಚೆನ್ನಪ್ಪ – 6-3-1949 ರಿಂದ 17-12-1950     ಶ್ರೀ ಎಂ. ಆರ್. ಶ್ರೀನಿವಾಸ ಮೂರ್ತಿ – 16-12-1950 ರಿಂದ 16-9-1953     ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ – 30-9-1953 ರಿಂದ 9-5-1954     ಪ್ರೊ. ಎ. ಎನ್. ಮೂರ್ತಿ ರಾವ್ 9-5-1954 ರಿಂದ 17-5-1956     ಶ್ರೀ ಬಿ. ಶಿವಮೂರ್ತಿ ಶಾಸ್ತ್ರಿ – 17-5-1956 ರಿಂದ 25-10-1964     ಪ್ರೊ. ಜಿ. ವೆಂಕಟಸುಬ್ಬಯ್ಯ – 25-10-1964 ರಿಂದ 11-6-1969     ಶ್ರೀ ಜಿ. ನಾರಾಯಣ – 11-6-1969 ರಿಂದ 26-7-1978     ಡಾ. ಹಂಪ ನಾಗರಾಜಯ್ಯ – 26-7-1978 ರಿಂದ 19-2-1986     ಹೆಚ್. ಬಿ. ಜ್ವಾಲನಯ್ಯ – 19-2-1987 ರಿಂದ 1-11-1988     ಪ್ರೊ. ಜಿ. ಎಸ್. ಸಿದ್ದಲಿಂಗಯ್ಯ – 7-2-1989 ರಿಂದ 14-5-1992     ಶ್ರೀ ಗೊ. ರು. ಚನ್ನಬಸಪ್ಪ – 14-5-1992 ರಿಂದ 22-6-1995     ಡಾ. ಸಾ. ಶಿ. ಮರುಳಯ್ಯ – 22-6-1995 ರಿಂದ 10-7-1998     ಶ್ರೀ ಎನ್. ಬಸವಾರಾಧ್ಯ – 10-7-1998 ರಿಂದ 11-7-2001     ಶ್ರೀ ಹರಿಕೃಷ್ಣ ಪುನರೂರು – 11-7-2001 ರಿಂದ 2-11-2004     ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) – 2-11-2004 ರಿಂದ 30-4-2008     ಡಾ. ನಲ್ಲೂರು ಪ್ರಸಾದ್ ಆರ್. ಕೆ – 27-8-2008 ರಿಂದ 27-2-2012     ಶ್ರೀ ಪುಂಡಲೀಕ ಹಾಲಂಬಿ – 02-05-2012 ಪ್ರಸ್ತುತವಾಗಿ ಮ.ನು.ಬಳೆಗಾರರು  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೆಲಸ ಮಾಡಿದರು. ಈಗ ಇವರ ಸ್ಥಾನಕ್ಕೇ ಚುನಾವಣೆ ನಡೆಬೇಕಿದೆ… ಹೀಗೆಯೇ ನಡೆದುಕೊಂಡು ಬಂದ ಸಾಹಿತ್ಯ ಪರಿಷತ್ತು ಈಗ ರಾಜಕೀಯ

ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ..! Read Post »

ಇತರೆ

ಶ್ವಾನೋಪಾಖ್ಯಾನ

ಹಾಸ್ಯ ಲೇಖನ ಶ್ವಾನೋಪಾಖ್ಯಾನ ಚಂದಕಚರ್ಲ ರಮೇಶ ಬಾಬು ನಮಗೆಲ್ಲಾ ಗೊತ್ತಿರುವ ಹಾಗೆ ನಾಯಿಗಳು ಅಥವಾ ಮರ್ಯಾದೆಪೂರ್ವಕವಾಗಿ ಕರೆಯುವುದಾದರೇ ಶುನಕಗಳು ಅಥವಾ ಶ್ವಾನಗಳು, ನಮ್ಮ ಸಮಾಜದ ಗಣ್ಯ ಜೀವಿಗಳಾಗಿವೆ.  ನಾನು ಮುಂಚಿನಿಂದಾ ಮನೆಯಲ್ಲಿ ನಾಯಿ ಸಾಕಾಣಿಕೆಯ ವ್ಯತಿರೇಕಿ.   ಬಹುಶ ನನ್ನ ಬಾಲ್ಯದಲ್ಲಿ ನನ್ನನ್ನಟ್ಟಿಸಿಕೊಂಡು ಬಂದ ನಾಯಿ ಅದಕ್ಕೆ ಕಾರಣವಿರಬಹುದು. ಅದು ಹಿಂದೆ ಬೀಳಲು ಕಾರಣ ನಾನು ಅದರ ಬಾಲ ತುಳಿದದ್ದು ಅಂತ ಹೇಳಿದ್ರೇ ಈ ನನ್ನ ನಿಲುವು ಸ್ವಲ್ಪ ಸಡಿಲವಾಗುತ್ತದೆ ಅಂತ ಮುಂಚೆನೇ ಹೇಳಲಿಲ್ಲ ಅಂತಿಟ್ಕೊಳ್ಳಿ. ಅದು ಬೇರೇ ಮಾತು. ನನ್ನ ಹೆಂಡತಿಗಂತೂ ನಾಯಿ ಸಾಕುವುದು ಒಂದು ನೋವಿನ ಅನುಭವ. ಅವಳ ತವರು ಮನೆಯಲ್ಲಿ ಅವರೆಲ್ಲಾ ಇಷ್ಟ ಪಟ್ಟು ಬೆಳೆಸಿದ ನಾಯಿ ಅದರ ಆಯುಷ ತೀರಿ ಸತ್ತು ಹೋಯಿತು. ಮನೆಯವರಿಗೆಲ್ಲಾ ಯಾರೋ ಆತ್ಮೀಯರನ್ನ ಕಳೆದುಕೊಂಡ ನೋವು. ಹಾಗಾಗಿ ಇವಳಿಗೆ ಒಂಥರಾ ವೈರಾಗ್ಯ. ತಂದು ಸಾಕಿಕೊಳ್ಳುವುದೇಕೆ, ಸತ್ತಾಗ ಮಿಡುಕುವುದೇಕೆ ? ಎನ್ನುವ ನಿರ್ವೇದ ಭಾವ. ಹಾಗಾಗಿ ಒಮ್ಮೆ ನಮಗೆ ಅದೆಷ್ಟು ನಾಯಿ ಸಾಕಿಕೊಳ್ಳುವ ಅಗತ್ಯ ಬಂದಿದ್ದರೂ ಸಾಕಲಿಲ್ಲ. ಅದಕ್ಕೆ ಕೈ ಹಾಕಲಿಲ್ಲ ನಾಯಿಗಳಲ್ಲಿ ಊರನಾಯಿಗಳು ಮತ್ತು ಕಾಡುನಾಯಿಗಳು ಎಂಬ ಪ್ರಭೇದಗಳಿದ್ದರೂ ಕಾಡುನಾಯಿಗಳು ನಮ್ಮ ನಡುವೆ ನಿವಸಿಸುವುದಿಲ್ಲ ವಾದ್ದರಿಂದ ಅವುಗಳನ್ನ ಈ ಲೇಖನದ ವ್ಯಾಪ್ತಿಗೆ ತೊಗೊಂಡಿಲ್ಲ.  ಊರ ನಾಯಿಗಳಲ್ಲಿ ಮತ್ತೆ ಸಿಗುವ ಪ್ರಭೇದಗಳೆಂದರೇ ಸಾಕು ನಾಯಿ ಮತ್ತು ಬೀದಿ ನಾಯಿ. ಸಾಕುನಾಯಿ ಯಾರಾದರೂ ಮನೆಯ ನಾಯಿ ಯಾಗಿರುತ್ತದೆ. ಅದರ ದೇಖರೇಖೆಗಳನ್ನ ಅದರ ಯಜಮಾನ ವಹಿಸಿಕೊಳ್ಳುತ್ತಾನೆ. ಅದು ಸ್ವಲ್ಪ ಮಟ್ಟಿಗೆ ಶಿಸ್ತಿನ ನಾಯಿ ಎನ್ನಬಹುದು. ಇದು ಕಚ್ಚುವುದಿಲ್ಲವಾ ಎಂದು ಕೇಳಬೇಡಿ. ನಮ್ಮನ್ನಾಳಿದ ಬಿಳಿಯರ ಗಾದೆ “ ಬಾರ್ಕಿಂಗ್ ಡಾಗ್ಸ್ ಸೆಲ್ಡಂ ಬೈಟ್ “ ಎನ್ನುತ್ತಾ ಅವುಗಳಿಗೆ ಬೆನಿಫಿಟ್ ಆಫ್ ಡೌಟ್ ಕೊಟ್ಟರೂ ನಮ್ಮವರು ಮಾತ್ರ “ಬೊಗಳುವ ನಾಯಿ ಕಚ್ಚುವುದಿಲ್ಲ “ ಅಂತ ಸಾರಿದ್ದಾರೆ. ಹಾಗೆ ಅಂತ ನೀವು ಬೊಗಳಿದ ನಾಯಿಗಳ ಮೇಲೆ ಕಚ್ಚುತ್ತದೋ ಇಲ್ಲವೋ ಪ್ರಯೋಗ ಮಾಡಬೇಕಾಗಿಲ್ಲ.  ನಾಯಿಯ ಸಹಜ ಗುಣವೇ ಕಚ್ಚುವುದು. ಆದಕಾರಣ ಇದು ಸಹ ಕಚ್ಚುತ್ತದೆ. ಕೆಣಕಿದರೆ ಮಾತ್ರ ಅಂತ ಅದರ ಒಡೆಯನ ಒಕ್ಕಣೆಯಾದರೂ ಅವರ ಹೇಳಿಕೆಯಲ್ಲಿ ಪೂರಾ ನಂಬಿಕೆ ಇಡಲಾಗುವುದಿಲ್ಲ. ಅದು ಸಹ ಕಚ್ಚುತ್ತದೆಯಾದ ಕಾರಣ ಮನೆಯ ಹೊರಗಡೆ ಫಲಕ ನೇತಾಡುತ್ತಿರುತ್ತದೆ,”ನಾಯಿ/ನಾಯಿಗಳಿವೆ ಎಚ್ಚರಿಕೆ “ ಅಂತ.  ನೀವು ಆಗ ಅವರ ಮನೆಯೊಳಗೆ ಕಾಲಿಡುವಾಗ ತುಂಬಾ ಎಚ್ಚರ ವಹಿಸುತ್ತೀರಿ. ಅದನ್ನು ಕಟ್ಟಿಹಾಕಿದಾರೆ ಅಂತ ಗೊತ್ತಾದರೇ ಮಾತ್ರ ನೀವು ಒಳಗಡೆ ಹೋಗುವ ಸಾಹಸ ಮಾಡುತ್ತೀರಿ. ಎಲ್ಲ ನಾಯಿಗಳಿಗೂ ಅವುಗಳ ಏರಿಯಾ ಇರುತ್ತದಂತೆ. ಅದು ದಾಟಿ ಯಾರು ಬಂದರೂಅವು ಸಹಿಸುವುದಿಲ್ಲ. ಈ ಸಾಕುನಾಯಿಯ ಏರಿಯಾ ಮನೆ. ಆದ ಕಾರಣ ಅದರ ಏರಿಯಾದ ಒಳಗೆ ಬಂದರೇ ಅದು ಒಮ್ಮೆ ಬೊಗುಳುವುದರ ಮೂಲಕ ನಿಮಗೆ ಎಚ್ಚರಿಕೆ ನೀಡುತ್ತದೆ, ತೊಲಗು ಅಂತ. ಅಷ್ಟರಲ್ಲಿ ಅದರ ಒಡೆಯ ಅಥವಾ ಒಡತಿ ಅದರ ಹೆಸರು ಕರೆದು, ಬರುವವರು ನಮ್ಮವರೇ ಎಂದ ಮೇಲೆ ಮಾತ್ರ, ನಿಮ್ಮ ಕಡೆ ಅದೇನೋ ಸಂಶಯದ ನೋಟದೊಂದಿಗೆ ಗುರ್ರೆನ್ನುತ್ತಾ ಒಳಗೆ ಹೋಗಲು ಬಿಡುತ್ತದೆ. ಈ ಅನುಭವ ಬಹುಶಾ ಎಲ್ಲರಿಗೂ ಒಮ್ಮೆಯಾದರೂ ಆಗಿರುತ್ತದೆ. ನೀವು ನಿಮ್ಮ ಮನೆಯಲ್ಲಿ ನಾಯಿ ಸಾಕಿದರೂ ಬೇರೇಯವರ ಮನೆ ನಾಯಿ ನಿಮ್ಮ ಅನುಭವವನ್ನು ಪರಿಗಣಿಸುವುದಿಲ್ಲ ಮತ್ತೆ ಅದರದೇ ಸೋದರನ/ಸೋದರಿಯ ಪೋಷಣೆ ಮಾಡುತ್ತಿರುವ ನಿಮ್ಮ ಬಗ್ಗೆ ಕೃತಜ್ಞತೆಯೂ ತೋರುವುದಿಲ್ಲ. ಅದಕ್ಕೆ ಅದರ ಏರಿಯಾ ಮತ್ತು ಒಡೆಯ ಮಾತ್ರ ಮುಖ್ಯ. ತುಂಬಾ ಜನರಿಗೆ ನಾಯಿ ಇರುವ ಮನೆಗಳಿಗೆ ಹೋದಾಗ ಮೆಲಕು ಹಾಕಿಕೊಳ್ಳುವ ಅನುಭವಗಳಿರುತ್ತವೆ. ನನಗಂತೂ ಒಮ್ಮೆ ಒಬ್ಬ ತಿಳಿದವರ ಮನೆಗೆ ಊಟಕ್ಕೆ ಹೋಗ ಬೇಕಾಗಿತ್ತು. ಅವರ ಹೇಳಿಕೆ ಮೇರೆಗೆ ಅಂತಿಟ್ಟುಕೊಳ್ಳಿ. ನಾನು ನನ್ನ ಕುಟುಂಬದ ಸದಸ್ಯರು ಅವರ ಮನೆಗೆ ಹೋಗಿ ಸೋಫಾದ ಮೇಲೆ ಕೂತ ತಕ್ಷಣ ಒಂದು ದೈತ್ಯಾಕಾರದ ನಾಯಿ ಒಳಗಿಂದ ಬಂದು ನನ್ನ ಭುಜಗಳಮೇಲೆ ಅದರ ಮುಂಗಾಲು ಹಾಕಿ ನಿಂತೇಬಿಟ್ಟಿತು. ನನ್ನ ಹೆಂಡತಿ ಮತ್ತು ಮಕ್ಕಳು ಹೆದರಿ, ಚೀರಿ,ದೂರ ಸರಿದು ಹೋದರು. ಅದು ಏನೂ ಮಾಡಲಿಲ್ಲ. ಬಹುಶ ಅದು ನನ್ನ ಪರಿಚಯ ಮಾಡಿಕೊಳ್ಳುತ್ತಿತ್ತೋ ಏನೋ. ಆದರೇ ಅದರ ಈ ಪರಿಯ ಆಕ್ರಾಮಿಕ ಭಂಗಿ ನನಗೆ ಗೊತ್ತಾಗುವುದಾದರೂ ಹೇಗೆ ? ನಾನು ಮಿಸುಕಾಡಲಿಲ್ಲ. ಏನು ಮಿಸುಕಿದರೇ ಏನು ಪ್ರಮಾದವೋ  ಯಾರಿಗ್ಗೊತ್ತು. ನನ್ನ ಮಿತ್ರರು ನಗುತ್ತಾ “ ಏನೂ ಮಾಡುವುದಿಲ್ಲ ಅದು ! ತುಂಬಾ ಸಾಧು. “ ಎನ್ನುತ್ತಾ ಅದರ ಹೆಸರು ಹಿಡಿದು ಕರೆದ ತಕ್ಷಣ ನನ್ನ ಮೇಲಿನ ಕಾಲುಗಳು ಕಿತ್ತುಕೊಂಡು ಅವರ ಹತ್ತಿರ ಹೋಯಿತು. ತುಂಬಾ ಸಾಧು ಅಂತ ಅವರಗ್ಗೊತ್ತು. ನನಗೆ ? ನಾನು ಬೆವರು ವರೆಸಿಕೊಂಡು ಪೆಕರನ ಹಾಗೆ ನಗುತ್ತಾ “ಹೌದಾ” ಎಂದೆ.  ನನ್ನ ಪರಿವಾರದವರಂತೂ ಇನ್ನೂ ಕಂಗಾಲಾಗೇ ಕಂಡರು. ಅವತ್ತಿನ ಅವರ ಮನೆಯ ಔತಣ ಕಹಿ ಎನ್ನಿಸಿದ್ದರಲ್ಲಿ ತಪ್ಪೇನಿಲ್ಲ. ಕೆಲವರು ಮನೆಯಲ್ಲಿ ಐದಾರು ನಾಯಿಗಳನ್ನ ಸಾಕುತ್ತಾರೆನ್ನುವುದು ನನ್ನ ಮಧ್ಯತರಗತಿಯ ಮನಸ್ಥಿತಿಗೆ ತುಂಬಾ ಅಚ್ಚರಿ ತಂದಿತ್ತು. ನನಗೆ ಗೊತ್ತಿರುವ ಒಬ್ಬ ಉದ್ದಿಮೆದಾರ ತನ್ನ ಮನೆಯಲ್ಲಿ ಮೂವತ್ತು ವಿವಿಧ ತಳಿಗಳ ನಾಯಿಗಳಿವೆ ಎಂದು ಹೇಳಿದಾಗ ಬೆಚ್ಚಿ ಬಿದ್ದಿದ್ದೆ. ಅವುಗಳಿಗಾಗಿ ಒಂದು ಪ್ರತ್ಯೇಕ ಗಾಡಿ ಮಾಡಿದ್ದಾರಂತೆ, ನಾಲ್ಕು ಜನ ಆಳಿದ್ದಾರಂತೆ. ಅದೇನು ಶುನಕ ವ್ಯಾಮೋಹವೋ ನಾ ಕಾಣೆ ! ವಿವಿಧ ತಳಿಗಳ ನಾಯಿಗಳ ಬಗ್ಗೆ ತಿಳಿದಾಗಲೆಲ್ಲಾ ನನಗನಿಸುತ್ತಿತ್ತು, ನಾನು ನನ್ನ ಜೀವನದಲ್ಲಿ ಏನೋ ಕಳೆದುಕೊಂಡೆನೇನೋ ಎಂದು. ಆದರೇ ನಾಯಿಗಳ ಬಗ್ಗೆ ಇರುವ ನನ್ನ ಗಾಬರಿ ಮಾತ್ರ, ನನ್ನ ಅವುಗಳನ್ನ ಹತ್ತಿರ ಸೇರಲು ಬಿಡಲಿಲ್ಲ. ಹೀಗೇ ಪಾರ್ಕುಗಳಿಗೆ ಅಥವಾ ರಸ್ತೆಯ ಮೇಲೆ ವಿಹಾರಕ್ಕೆ ಹೋಗುವಾಗ, ನಾಯಿಗಳ ಒಡೆಯರು ತಮ್ಮ ಜೊತೆಗೆ ಕರೆದೊಯ್ಯುವ ತಮ್ಮ ಸಾಥಿಗಳನ್ನ ನೋಡುತ್ತಾ ಅದು ಯಾವ ತಳಿಯ ನಾಯಿ ಇರಬಹುದು ಅಂತ ಊಹೆ ಮಾಡುತ್ತಿದ್ದೆ. ಭೂಮಿಗೆ ಸಮಾನಾಂತರವಾಗಿರುವ ಕುಳ್ಳ ಕುನ್ನಿಗಳಿಂದಾ ಹಿಡಿದು ಒಡೆಯನ ಸೊಂಟದ ವರೆಗೂ ಬರುವ ಗ್ರೇಟ್ ಡೇನ್ ಕಾಲಭೈರವನ ವರೆಗೆ ಎಲ್ಲವನ್ನೂ ಕುತೂಹಲದಿಂದ ನೋಡಿದ್ದೆ. ಅಮೆರಿಕಕ್ಕೆ ಹೋದಾಗ ಅಲ್ಲಿ ಸಹ ಇನ್ನೂ ವೈವಿಧ್ಯದ ಶುನಕ ದರ್ಶನವಾಯಿತು. ಅಮೆರಿಕದಲ್ಲಿ ಶುನಕಗಳಿಗೆ ಮರ್ಯಾದೆ ಜಾಸ್ತಿ. ಅವುಗಳನ್ನ ತಮ್ಮ ಮಕ್ಕಳಿಗಿಂತ ಮಿಗಿಲಾಗಿ ನೋಡಿಕೊಳ್ಳೂತ್ತಾರೆ ಅಂತ ನನ್ನ ಮಗಳು ಹೇಳಿದಳು. ಅವುಗಳ ತರೇವಾರಿ ಅವಶ್ಯಕತೆಗಳಿಗಾಗಿ ತುಂಬಾನೇ ಪೆಟ್ ಶಾಪ್ ಗಳಿರುತ್ತವೆ.  ಅವುಗಳ ತಿಂಡಿ, ಔಷಧಿ, ಸಾಬೂನುಗಳ ಜೊತೆಗೆ ಕಾಲಕ್ಕೆ ತಕ್ಕ ಹಾಗೆ ಬದಲಿಸುವ ದಿರಿಸುಗಳು ಸಹ ಅಲ್ಲಿ ಸಿಗುತ್ತವೆ. ಶೀತಾಕಾಲದಲ್ಲಿ ಅವುಗಳಿಗೆ ಮೆತ್ತನೆಯ ಬೂಟುಗಳನ್ನು ಹಾಕಿ ಕರೆದು ತರೆತ್ತಾರೆ. ಅವುಗಳಿಗೆ ಚಳಿಯಾಗದಿರಲು ಸ್ವೆಟರ್ ಗಳು ಹಾಕುತ್ತಾರೆ. ಇನ್ನು ಡಾಗ್ ಶೋಗಳಲ್ಲಿ ಅವುಗಳಿಗೆ ಪೈಪೋಟಿಯಾಗಿ ಮಾಡುವ ಸಿಂಗಾರ ನೋಡಲು ನೂರುಕಣ್ಣು ಸಾಲದು. ಇದೆಲ್ಲದಕ್ಕೂ ಮಕುಟಾಯಮಾನವೆಂದರೇ ಅವುಗಳನ್ನು ಹೊರಗೆ ಕರೆದೊಯ್ದಾಗ ಅವುಗಳ ದೈನಂದಿನ ಬಹಿರ್ ಕೃತ್ಯಗಳಿಗಾಗಿ ಒಂದು ಪ್ಲಾಸ್ಟೀಕ್ ಚೀಲವನ್ನು ಜೊತೆಗೆ ಕೊಂಡ್ಹೋಗುವುದು. ಅವುಗಳ ಮಲವನ್ನು ಹೆಕ್ಕಿ ಆ ಚೀಲಗಳಲ್ಲಿ ಹಾಕಿ ಅಲ್ಲಲ್ಲಿ ಇದಕ್ಕಾಗಿ ಇಟ್ಟಿರುವ ಡಬ್ಬಿಗಳಲ್ಲಿ ಹಾಕಬೇಕು. ಹೊರಗೆ ಎಲ್ಲೂ ಹೇಸಿಗೆ ಆಗಬಾರದು. ಹಾಗೆ ಮಾಡಿದ್ದು ಕಂಡಲ್ಲಿ ೨೫ ಡಾಲರ್ ಜುರ್ಮಾನೆ ತೆರಬೇಕಾಗಿರುತ್ತದೆ. ಅಂದರೇ ೧೫೦೦ ಸಾವಿರ ರುಪಾಯಿ ಅಂದಾಜಿಗೆ. ಮತ್ತೆ ಅವುಗಳದ್ದು ರಾಜಭೋಗವೆಂದು ನಿಮಗೆ ಅನಿಸುವುದಿಲ್ಲವೇ ! ನಾಯಿ ಕಚ್ಚಿದರೇ ಅದಕ್ಕೆ ನಡೆಯಬೇಕಾದ ಉಪಚಾರ ಸಹ ನಮ್ಮ ತಲೆ ಕೆಡಿಸುತ್ತದೆ. ಈಗೀಗ ಅದೇನೋ ರಾಬೀಪೂರ್ ಎನ್ನುವ ಮದ್ದು ಬಂದಿದೆ ಎನ್ನುವುದು ಬಿಟ್ಟರೇ, ಹಿಂದಿನ ದಿನಗಳಲ್ಲಿ ಹೊಕ್ಕಳ ಸುತ್ತಲೂ ಹಾಕಿಸಿಕೊಳ್ಳಬೇಕಾದ ಹದಿನಾಲ್ಕು ಇಂಜೆಕ್ಷನ್ ಗಳು ನಾಯಿ ಕಡಿತಕ್ಕಿಂತ ಜಾಸ್ತಿ ಹೆದರಿಸುತ್ತಿದ್ದವು. ನಂತರ ಕಚ್ಚಿದ ನಾಯಿಯ ಮೇಲೆ ಗುಮಾನಿ ಇಡಬೇಕು. ಅದು ಹುಚ್ಚು ನಾಯಿಯಾಗಿರಬಾರದು.  ಹುಚ್ಚು ನಾಯಿ ಕಡಿದು ನಾಯಿಯ ತರ ಬೊಗಳುತ್ತಾ ಸತ್ತವರ ಕತೆಗಳು ತುಂಬಾ ಪ್ರಚಲಿತವಾಗಿದ್ದವು ಆಗ. ಅವರ ಬಾಯಿಯಿಂದ ಜೊಲ್ಲು ಸುರಿಯುತ್ತಿತ್ತು, ಅವರನ್ನ ಕಂಬಕ್ಕೆ ಕಟ್ಟಿ ಹಾಕುತ್ತಿದ್ದರು. ಇಡೀರಾತ್ರಿ ಕೆಟ್ಟದಾಗಿ ಬೊಗಳಿತ್ತಿದ್ದರು ಎನ್ನುವ ಸುದ್ದಿಗಳಿಗೇನೂ ಬರವಿರಲಿಲ್ಲ. ಈಕಾರಣಕ್ಕಾಗಿ ನಾಯಿಯನ್ನ ಸಾಕುವುದಿರಲಿ, ಹತ್ತಿರ ಬಿಟ್ಟುಕೊಳ್ಳುವುದು ಸಹ ತುಂಬಾ ಡೇಂಜರ್ರಾಗಿ ಕಾಣುತ್ತಿತ್ತು. ಈಗ ಸಹ ಈ ಹೊಸ ಲಸಿಕೆಯನ್ನ ಎಷ್ಟು ಜನ ಹಾಕಿಸಿಕೊಂಡಿದ್ದಾರೆ, ಅವರಿಗೆ ಅದು ಎಷ್ಟರ ವರೆಗೆ ಗುಣ ಕಾಣಿಸಿದೆ ಎಂದು ಇನ್ನೂ ಸರಿಯಾದ ಮಾಹಿತಿ ಗೊತ್ತಿಲ್ಲ. ಆದರೇ ಹದಿನಾಲ್ಕು ಇಂಜಕ್ಷನ್ ಬೇಡ ಎನ್ನುವುದು ಒಂತರಾ ನೆಮ್ಮದಿ. ಇನ್ನು ಈ ನಾಯಿಗಳಿಗೆ ಸೈಕಿಲುಗಳ ಮತ್ತು ದ್ವಿಚಕ್ರ ವಾಹನಗಳ ಹಿಂದೆ ಬೀಳುವ ಅಭ್ಯಾಸವಿರುತ್ತದೆ. ಕಾರಿನ ಹಿಂದೆ ಸಹ ಬೀಳುತ್ತವೆ ಆದರೇ ಅವುಗಳಲ್ಲಿ ಕೂತವರು ಸೇಫ್. ಹಾಗಾಗಿ ಪ್ರಹಸನಗಳಾಗುವುದಿಲ್ಲ. ಆದರೇ ದ್ವಿಚಕ್ರವಾಹನಗಳ ಸವಾರರ ಹಿಂದೆ ಬಿದ್ದು  ಕೆಲ ಕಹಿ ಅನುಭವಗಳನ್ನೊದಗಿಸಿವೆ ಎಂದು ಹೇಳಬಹುದು.  ನಾನು ಮತ್ತು ನನ್ನವಳು ಒಮ್ಮೆ ದೇವಸ್ಥಾನದಿಂದ ಮನೆಗೆ ಬರುವಾಗ ಒಂದು ಸಂದಿಯಲ್ಲಿ ಒಂದು ಚಿಕ್ಕ ನಾಯಿ ನಮ್ಮ ಹಿಂದೆ ಬಿದ್ದಿತ್ತು. ಚಿಕ್ಕದು ಅಂತ ಯಾಕೆ ಪ್ರತ್ಯೇಕವಾಗಿ ಹೇಳುತ್ತಿದ್ದೇನೆ ಅಂದರೇ ಅದು ಚಿಕ್ಕದಾಗಿದ್ದರಿಂದ ಅದರ ವೇಗ ತುಂಬಾ ಜಾಸ್ತಿಯಾಗಿತ್ತು. ನಾನು ಗಾಡಿಯ ವೇಗ ಜಾಸ್ತಿ ಮಾಡಿದರೂ ಅದು ನಮ್ಮನ್ನ ಬಿಡಲಿಲ್ಲ. ನನ್ನವಳ ಸೀರೆಯ ಅಂಚನ್ನ ಹಿಡಿದುಬಿಟ್ಟಿತ್ತು. ಅವಳಿಗೂ ಹೆದರಿಕೆ, ನಂಗಂತೂ ಗಾಡಿ ಬಿಡುವುದರ ಜೊತೆಗೆ ಹಿಂದೆ ಬಿದ್ದ ಈ ಅವಾಂತರವನ್ನ ನಿಭಾಯಿಸಬೇಕಾಯಿತು. ಯಾರೋ ಅದಕ್ಕೆ ಕಲ್ಲು ತೂರಿ ಬಿಡಿಸುವುದರಲ್ಲಿ ನಾವಿಬ್ಬರೂ ಆಯ ತಪ್ಪಿ ಬೀಳುವುದೇ ಆಯಿತು. ಪುಣ್ಯ ಜಾಸ್ತಿ ಪೆಟ್ಟಾಗಲಿಲ್ಲ. ಸ್ವಲ್ಪದರಲ್ಲೇ  ಬಚಾವಾಯಿತು. ಪ್ರಭಾವಲಯದ ಮಾತು ಬಂದಾಗ ಇನ್ನೊಂದು ವಿಷಯ ಚರ್ಚೆಗೆ ಬರುತ್ತದೆ. ನಾಯಿಗಳ ಜಗಳಕ್ಕೂ ಈ ಪ್ರಭಾವಲಯಕ್ಕೂ ತುಂಬಾ ನಿಕಟ ಸಂಬಂಧ. ಪ್ರತಿ ನಾಯಿಯೂ ತನ್ನ ಪ್ರಭಾವಲಯವನ್ನ ಏರ್ಪಡಿಸಿಕೊಳ್ಳುತ್ತದಂತೆ. ಸಾಕುನಾಯಿಗಳಿಕೆ ತಾವಿರುವ ಮನೆಯೇ ಈ ವ್ಯಾಪ್ತಿ ಪ್ರದೇಶ ವಾಗಿದ್ದರೇ, ಮತ್ತೆ ಬೀದಿ ನಾಯಿಗಳಿಗೆ ಯಾವುದು ಮತ್ತು ಎಲ್ಲಿಯವರಗೆಎನ್ನುವ ಪ್ರಶ್ನೆ? ಈ ಸಂದಿಗ್ಧವೇ ಜಗಳಗಳ ನಾಂದಿ. ಪ್ರತಿ ನಾಯಿ ಅಥವಾ ಆ ಬೀದಿನಾಯಿಗಳ ಗುಂಪು ಒಂದು ನಿರ್ದಿಷ್ಟ ಪ್ರದೇಶವನ್ನು ತಮ್ಮ ವ್ಯಾಪ್ತಿ ಪ್ರದೇಶವಾಗಿ ನಿರ್ದೇಶಿಸಿಕೊಳ್ಳುತ್ತವೆಯಂತೆ. ಆ ವ್ಯಾಪ್ತಿ ಪ್ರದೇಶಕ್ಕೆ ಬೇರೊಂದು ನಾಯಿ ಬಂದಾಗ ಅವುಗಳು ಬೊಗಳುತ್ತಾ ತಮ್ಮ ನಿಲುವನ್ನ ತೋರಿಸುತ್ತವೆ, “ನೀನು ನಿನ್ನ ಹದ್ದು ಮೀರಿ ಬಂದಿದೀಯಾ” ಅಂತ. ಬಾಲ ಮುದುರಿಕೊಂಡು ಓಡಿದರೇ ಸರಿ. ಇಲ್ಲಾ ಇದ್ದೇ ಇದೆಯಲ್ಲಾ ನಾಯಿತರಾ ಕಚ್ಚಾಟ. ನಾಯಿಗಳ ಬಗ್ಗೆ ತುಂಬಾ ತೆಗಳಿದ ಹಾಗಾಯಿತಲ್ಲವೇ ? ಇದನ್ನ ಶುನಕ ಪ್ರೇಮಿಗಳು ಸಲೀಸಾಗಿ ತೆಗೆದುಕೊಳ್ಳಲಿಕ್ಕಿಲ್ಲ. ಅದಕ್ಕೇ ಈ ಕೆಳಗಿನ ಸಾಲುಗಳು. ನಾಯಿಗಳು ಸಮಾಜ ಸೇವಕರಾಗಿ ಖ್ಯಾತಿ ಗಳಿಸಿವೆ. ತುಂಬಾ ವಿಶ್ವಾಸದ ಪ್ರಾಣಿ. ಅನ್ನ ಕೊಟ್ಟವರ ಮನೆಯನ್ನು ಜತನವಾಗಿ ಕಾಯುತ್ತವೆ. ನುಸುಳಿ ಬಂದವರನ್ನು ನೆಲ ಕಚ್ಚುಸುತ್ತವೆ. ಅವುಗಳ ಘ್ರಾಣ ಶಕ್ತಿ ತುಂಬಾ ತೀಕ್ಷ್ಣವಾಗಿದ್ದು, ಪೋಲಿಸ್ ಇಲಾಖೆಗೆ  “ಮೂಸುವನಾಯಿ”ಗಳಾಗಿ ತುಂಬಾ ಸೇವೆ ಗೈಯುತ್ತವೆ.  ಇನ್ನು ಉಪಾಖ್ಯಾನಕ್ಕೆ ಮಂಗಳ ಹಾಡುವ ಮುನ್ನ ಒಂದು ನಗೆಹನಿ ಇವುಗಳ ಬಗ್ಗೆ. ಹೊರಗಡೆ ತಿರುಗುತ್ತಿರವ ಒಬ್ಬರಿಗೆ ನಾಯಿ ಕಚ್ಚಿತು. ಅವರು ತಮ್ಮಕೈಲಿದ್ದ ಕೊಡೆಯಿಂದ ನಾಯಿಗೆ ನಾಲ್ಕು ಬಾರಿಸಿದರು. ನಾಯಿಗೆ ಪೆಟ್ಟಾಯಿತು. ನಾಯಿಯ ಮಾಲೀಕ ಕೋರ್ಟಿಗೆ ಹೋದ. ಕೇಸು ವಿಚಾರಣೆಗೆ ಬಂದಾಗ ಆರೋಪಿ ತನ್ನ ವಾದವನ್ನು

ಶ್ವಾನೋಪಾಖ್ಯಾನ Read Post »

ಇತರೆ, ಪ್ರಬಂದ

ಅಳುವನ್ನು ಅನುಸರಿಸಿ ಹೋಗುವವನೇ ಕವಿ

ಪ್ರಬಂಧ ಅಳುವನ್ನು ಅನುಸರಿಸಿ ಹೋಗುವವನೇ ಕವಿ ಸರಿತಾಮಧು ಹಕ್ಕಿಯಂಥ ಸಣ್ಣ ಜೀವಿಯೊಂದರ ಅಳುವಿಗೂ ಕಿವಿಯಾಗಬಲ್ಲವನೇ ಕವಿ ಎಂಬ ಮಾತು ಅಕ್ಷರಶಃ ಸತ್ಯ. “ರುದಿತಾನುಸಾರಿ ಕವಿಃ ” ಎಂಬುದಾಗಿ ಮಹರ್ಷಿ ವಾಲ್ಮೀಕಿಯನ್ನು ಕಾಳಿದಾಸ ಕವಿ ಹೆಸರಿಸಿ, ಹಕ್ಕಿಯ ಶೋಕ ಹಾಗೂ ಸೀತೆಯ ಪ್ರಲಾಪ ಎರಡನ್ನೂ ಹೃದ್ಯವಾಗಿಸಿಕೊಂಡ ಮಹಾನ್ ಕವಿ , ಅಂದರೆ ಅಳುವನ್ನು ಅನುಸರಿಸಿ ಹೋಗುವವನೇ ಕವಿ ಎಂದರ್ಥ. ನವರಸಗಳಲ್ಲಿ ಕರುಣ ರಸವೊಂದೇ ಇರುವುದು ಎಂಬ ಮೀಮಾಂಸೆಗೂ ಪಾತ್ರನಾದ ಕವಿ ವಾಲ್ಮೀಕಿ.      ಸ್ವತಃ ಬೇಡ ನಾಗಿದ್ದು ರತ್ನಾಕರ ಎಂಬ ಪೂರ್ವಾಶ್ರಮದ ನಾಮಧೇಯದ ವಾಲ್ಮೀಕಿ ನಾರದ ಮುನಿಗಳ ಉಪದೇಶದಿಂದ ರಾಮ ನಾಮ ಜಪದಲ್ಲಿ ತೊಡಗಿ  , ಧ್ಯಾನಾಸಕ್ತನಾಗಿ ಮನಃಪರಿವರ್ತನೆಯಾದ ಕಥೆ ಎಲ್ಲರಿಗೂ ಗೊತ್ತಿರುವಂಥದ್ದು. ಹೀಗಿರುವಾಗ ಒಮ್ಮೆ ವಾಲ್ಮೀಕಿ ಮಹರ್ಷಿಗಳು ತಮಸಾ ನದೀ ತೀರದಲ್ಲಿ ಸಂತೋಷವಾಗಿ ಹಾರಾಡುತ್ತಿದ್ದ ಕ್ರೌಂಚ ಪಕ್ಷಿ ಜೋಡಿಯೊಂದನ್ನು ಆನಂದತುಂದಿಲರಾಗಿ ವೀಕ್ಷಿಸುತ್ತಿದ್ದರು. ಅದೇ ಸಂದರ್ಭದಲ್ಲಿ ಬೇಡನೊಬ್ಬನು ತನ್ನ ಬಾಣದಿಂದ ಗಂಡುಹಕ್ಕಿಯನ್ನು ಕೊಲ್ಲುತ್ತಾನೆ. ಆ ಸಮಯಕ್ಕೆ ಅದರ ಸಂಗಾತಿ ಹೆಣ್ಣು ಹಕ್ಕಿಯು ವಿರಹದಿಂದ ಪ್ರಲಾಪಿಸುವುದು.ಇಂತಹ ಹೃದಯ ವಿದ್ರಾವಕ ಸನ್ನಿವೇಶವನ್ನು ಕಂಡು ಮಹರ್ಷಿಗಳು ಕರುಣೆ ಹಾಗೂ ಅತೀವ ದುಃಖದಿಂದ ಬೇಡನನ್ನು ಶಪಿಸುತ್ತಾರೆ: “ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ  ಸಮಾಃ ಯತ್ರ್ಕೌಂಚ ಮಿಥುನಾದೇಕ ಮವಧೀಃ  ಕಾಮಮೋಹಿತಮ್” ಅಂದರೆ ಕಾಮಮೋಹಿತವಾದ ಈ ಕ್ರೌಂಚ ಪಕ್ಷಿಗಳ ಜೋಡಿಯಲ್ಲಿ ಒಂದನ್ನು ಕೊಂದ ನಿನಗೆ ಎಂದಿಗೂ ಶಾಂತಿ ಲಭಿಸಲಾರದು ಎಂಬ ಶೋಕದ ನುಡಿಯೇ ಶೋಕವಾಯಿತು. ಬ್ರಹ್ಮದೇವನ ಇಚ್ಛೆಯಂತೆ ನಾರದರು ತನಗೆ ಹೇಳಿದ್ದ ರಾಮನ ಕಥೆಯನ್ನು ೨೪೦೦೦ ಶ್ಲೋಕಗಳನ್ನೊಳಗೊಂಡ ಮಹಾಕಾವ್ಯವಾಗಿ ಬರೆದರು. ಹೀಗೆ ಸಂಕಟಕ್ಕೆ ಮಿಡಿದ ಮನಸ್ಸೊಂದು ಬೃಹತ್ ಕಾವ್ಯದ ಉಗಮಕ್ಕೆ ಪ್ರೇರಣೆಯಾಯಿತು. ಅಲ್ಲಿಯವರೆಗೂ ವಾಲ್ಮೀಕಿಯಲ್ಲಿ ಹುದುಗಿದ್ದ ಕಾವ್ಯ ಶಕ್ತಿ ಪ್ರಕಟವಾಯಿತು ಅವನ ಕಾವ್ಯ ಪ್ರೌಢಿಮೆಯು ನಂತರದ ಕವಿಗಳಿಗೆ ದಾರಿದೀಪವಾಯಿತು.     ಆಂಜನೇಯನಿಗೂ ಅವನ ಶಕ್ತಿ ಸಾಮರ್ಥ್ಯಗಳ  ಅರಿವು ಇರಲಿಲ್ಲವಂತೆ. ತನ್ನಿಂದೇನಾಗದು , ತಾನು ಯಶಸ್ವಿಯಾಗುವುದಿಲ್ಲ ,ತಾನೊಬ್ಬ ಸಾಧಾರಣ ವ್ಯಕ್ತಿ ಎಂದೇ ಆತ ತಿಳಿದಿರುತ್ತಾನೆ.ಇತರರು ಹೇಳಿ , ನೀನು ಮಾಡಬಲ್ಲೆ ಎಂದು ಹುರಿದುಂಬಿಸಿದರೆ ಮಾತ್ರ , ಅವನ ಶಕ್ತಿ ಸಾಮರ್ಥ್ಯ ಬೆಳಕಿಗೆ ಬರುತ್ತದೆ. ಇದು ಅವನಿಗೆ ಸೂರ್ಯದೇವನಿತ್ತ ಶಾಪ! ಅಂದರೆ ಈ ಕಥೆಯಂತೆ ವಾಲ್ಮೀಕಿಯಲ್ಲಿ ಸುಪ್ತ ವಾದ ಕಾವ್ಯಶಕ್ತಿಗೆ   ಶೋಕ ಪ್ರಚೋದನೆ ನೀಡಿತು. ಕ್ಕೊಕ್ಕರೆ, ಸಾರಸ, ಬೆಳ್ಳಕ್ಕಿ ಎಂದೂ ಕರೆಯಲ್ಪಡುತ್ತದೆ ಈ ಕ್ರೌಂಚ ಹಕ್ಕಿ.  ಸಂಸ್ಕೃತ ದಲ್ಲಿ ಸಾರಸ ಎಂದರೆ ಕೆರೆಯ ಹಕ್ಕಿ ಎಂದರ್ಥ. ಇದನ್ನು ಸಾರಂಸ ಎಂದೂ ಕರೆಯಲಾಗುತ್ತದೆ. ಯುರೋಪ್, ಏಷ್ಯಾ ಮತ್ತು ಆಸ್ಟ್ರೇಲಿಯಾದಲ್ಲಿ ಕಾಣಬರುವ ಸಾರಸ್ ಕೊಕ್ಕರೆ ಬಗ್ಗೆ ನನ್ನ ಗಮನ ಸೆಳೆದ ಪದ್ಯ ಪಂಜಾಬಿನ ಕವಿ ಮನಮೋಹನ ಸಿಂಗ್ ( ಮಾಜಿ ಪ್ರಧಾನಿ ,ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಲ್ಲ) ರವರು ಬರೆದಿರುವ “To a pair of sarus cranes”. ವಾಲ್ಮೀಕಿ ಮಹರ್ಷಿಗಳನ್ನು ಕಾಡಿದಂತಹ ಭಾವವೊಂದು ಪುನರಾವರ್ತನೆ ಆಗಿರುವಂತೆ ಇದೆ ಈ ಪದ್ಯದ ಸಾಲುಗಳಲ್ಲಿ. The male was shot as he necked to pull the reluctant sun out from the rim of horizon She flew crying As he was picked up hands and jaws And a proud neck was humbled to lie like dirty linen in a coarse washing bag  She circled the sky In movements of grace over his disgraceful end The killers went away and she returned to the death’s scene With grief that inscribed its intensity in dots and pits Like the Morse code of bird’s sorrow Transmitted to the air With her beak she kissed a few feathers Picked the ones that wind had not taken away and sat to hatch The blood stained feathers into a toddling chick A wave of the seas she had never seen Came to her from far away ಈ ಪದ್ಯದ ಮೊದಲ ಸಾಲುಗಳಲ್ಲಿ ಸೂರ್ಯೋದಯ ಸಮಯಕ್ಕೆ ಗೂಡಿನಾಚೆ ತನ್ನ ಉದ್ದನೆಯ ಕತ್ತು ಚಾಚುವಷ್ಟರಲ್ಲಿ ಬೇಡನೊಬ್ಬನ ಬಾಣದ ಗುರಿಗೆ ಗಂಡುಹಕ್ಕಿ ಬಲಿಯಾಗಿಬಿಟ್ಟಿತು.  ಹೆಣ್ಣು ಕೊಕ್ಕರೆಯು ಪ್ರಲಾಪಿಸುತ್ತಾ ಅತ್ತ ಧಾವಿಸುತ್ತಿರಲು ಬೇಡನು ಇದಾವುದನ್ನು ಲೆಕ್ಕಿಸದೇ ತನ್ನ ಹಳೆಯ ಕೈಚೀಲದೊಳಗೆ ಸತ್ತ ಗಂಡು ಕೊಕ್ಕರೆಯನ್ನು ನಿರ್ದಾಕ್ಷಿಣ್ಯವಾಗಿ ಎಳೆದುಕೊಂಡು ಹೊರಟೇಬಿಟ್ಟನು. ಆಕಾಶದಲ್ಲಿ ಪ್ರದಕ್ಷಿಣೆ ಹಾಕುತ್ತಾ ತನ್ನ ಸಂಗಾತಿ ಬಿದ್ದ ಜಾಗಕ್ಕೆ ಬರಲು , ರಕ್ತ ಸಿಕ್ತವಾಗಿ ಬಿದ್ದ ಪುಕ್ಕಗಳನ್ನು ಕೊಕ್ಕಿನಿಂದ ಎತ್ತಿ ಮುದ್ದಿಸಿ, ತನ್ನೆಲ್ಲಾ ಗರಿಗಳನ್ನು ಅದರ ಮೇಲೆ ಮುದುಡಿ ಮೊಟ್ಟೆ ಇಡುವಂತೆ ಕುಳಿತು ಬಿಟ್ಟಿತು.  ಸಮುದ್ರದಲೆಗಳ ಮೇಲಿಂದ ತೇಲಿ ಬರುವ ಬಿರುಗಾಳಿಗೆ ಆ ದುಃಖ ತಪ್ತ ಹೆಣ್ಣು ಹಕ್ಕಿಯನ್ನು ಗಂಡು ಹಕ್ಕಿಯ ಸಮೀಪಕ್ಕೆ ಕರೆದೊಯ್ದಿತು.   ಕವಿ ಇಲ್ಲಿ ಹೇಳುವುದೆಂದರೆ ಹೆಣ್ಣು ಹಕ್ಕಿಯ ಪ್ರೀತಿ ಮನುಷ್ಯರಿಗೂ ಮಿಗಿಲಾದದ್ದು. ಯಕಃಶ್ಚಿತ್ ಪಕ್ಷಿ ಅಥವಾ ಪ್ರಾಣಿ ಎಂದು ಬೇಟೆಯಾಡುವ ಮಾನವನಿಗೆ ಅವುಗಳ ಮೂಕವೇದನೆ ಅರಿವಾಗುವುದೆಂದಿಗೆ? ಹಾಗಾಗಿಯೇ ಮಹಾತ್ಮ ಗಾಂಧಿಯವರು ಹೇಳುತ್ತಾರೆ : “The greatness of nation and it’s moral progress can be judged by the way its animals are treated” ಈ ಮಾತು ನೂರಕ್ಕೆ ನೂರರಷ್ಟು ಸತ್ಯ ಅಲ್ಲವೇ? ಮೋಜಿಗಾಗಿ, ಆಹಾರಕ್ಕಾಗಿ, ವಿಹಾರಕ್ಕಾಗಿ ಹೇಯಕೃತ್ಯ ಪಕ್ಷಿ- ಪ್ರಾಣಿಗಳ ಬೇಟೆ. ಒಂದುವೇಳೆ ಮಾನವರಾದ ನಮ್ಮ ಚರ್ಮವನ್ನು ಸುಲಿದು ರಸ್ತೆ ಬದಿಯ ಅಂಗಡಿಗಳಲ್ಲಿ ತೂಗುಹಾಕಿದ್ದರೆ, ಬೆನ್ನಟ್ಟಿ ಬೇಟೆ ಆಡಿದ್ದರೆ, ಹರಕೆಯ ನೆಪದಲ್ಲಿ ಬಲಿ ಕೊಡುವಂತಿದ್ದರೆ ಮಾತು ಬರುವ ನಾವು ಸುಮ್ಮನಿರುತ್ತಿದ್ದೆವಾ? ಅವುಗಳು ಕೂಡಾ ನಮ್ಮಂತೆಯೇ ಅಥವಾ ನಮಗಿಂತಲೂ ಮಿಗಿಲು ಎನ್ನುವ ಭಾವನೆ ನಮ್ಮದಾಗಲಿ. ಪ್ರಾಣಿ ಪಕ್ಷಿಗಳ ಮೂಲಕವೇ ಹೆಣೆದಿರುವ ಸಾವಿರಾರು ಮೌಲ್ಯಯುತ ಕಥೆಗಳಿವೆ.ಅವುಗಳೊಡನೆ ನಮ್ಮ ಸಾಂಗತ್ಯ ಚಿರಂತನ. **************************************************************

ಅಳುವನ್ನು ಅನುಸರಿಸಿ ಹೋಗುವವನೇ ಕವಿ Read Post »

ಇತರೆ, ಶಿಕ್ಷಣ

ಗುರುವಿನ ಗರಿಮೆ

ಲೇಖನ ಗುರುವಿನ ಗರಿಮೆ ನೂತನ ದೋಶೆಟ್ಟಿ ಬಾಲ್ಯದಲ್ಲಿ ಶಿಕ್ಷಣವೆಂದರೆ ಶಿಕ್ಷೆ  ಯೌವನದಲ್ಲಿ ಶಿಕ್ಷಣವೆಂದರೆ ಪರೀಕ್ಷೆಗಳು ಹಾಗೂ ಮೋಜು, ಆನಂತರದಲ್ಲಿ ಅದೇ ಶಿಕ್ಷಣ ವೃತ್ತಿಗೆ ರಹದಾರಿ.ಈ ರೀತಿಯಾಗಿ ಶಿಕ್ಷಣವನ್ನು ಸರಳೀಕರಿಸಬಹುದಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹಿನ್ನೆಲೆಯಲ್ಲಿ ಎರಡು ಸರಳ ಸೂತ್ರಗಳನ್ನು ನಿಮ್ಮ ಮುಂದೆ ಇಡಬಯಸುತ್ತೇನೆ.  ಶಿಕ್ಷಣ= ಶಿಕ್ಷಣ ಸಂಸ್ಥೆ+ ವಿದ್ಯಾರ್ಥಿ ಉದ್ಯೋಗ= ಮಾರ್ಕ್ಸ+ ವಶೀಲಿ ಈ ಎರಡು ಸೂತ್ರಗಳನ್ನು ಇಟ್ಟುಕೊಂಡು ಇಂದಿನ ಶಿಕ್ಷಣದ ಬಗ್ಗೆ ನೋಡೋಣ. ಮೊದಲ ಸೂತ್ರದಲ್ಲಿ ಶಿಕ್ಷಣ ಸಂಸ್ಥೆಗಳು ಬಹು ಮುಖ್ಯವಾಗುತ್ತವೆ. ಉನ್ನತ ಶಿಕ್ಷಣದಲ್ಲಿ ಈ ಸಂಸ್ಥೆಗಳು ನೀಡುವ ಶಿಕ್ಷಣದ ಗುಣಮಟ್ಟ ಮುಖ್ಯವಾದರೂ ಆ ಸಂಸ್ಥೆಗಳ ಮೂಲಕ ದೊರೆಯಬಹುದಾದ ಉದ್ಯೋಗಾವಕಾಶ ಹಾಗೂ ಸಂಬಳದ ಪ್ಯಾಕೇಜ್ ಬಹಳ ಮುಖ್ಯವಾಗುತ್ತದೆ.ಈ ಕಾರಣದಿಂದಲೇ ತಾಂತ್ರಿಕ ಹಾಗೂ ವೈದ್ಯಕೀಯ ಉನ್ನತ ಶಿಕ್ಷಣ ವಿದ್ಯಾಲಯಗಳು ಪರಸ್ಪರ ಪೈಪೋಟಿಗೆ ಬಿದ್ದಂತೆ ವಿದ್ಯಾರ್ಥಿಗಳನ್ನು ತಮ್ಮತ್ತ ಸೆಳೆದುಕೊಳ್ಳಲು ಹೊಸ ಹೊಸ ಆಮಿಷಗಳನ್ನು ಒಡ್ಡುತ್ತಿರುವುದು.ಪ್ರತಿವರ್ಷ ಸಮರೋಪಾದಿಯಲ್ಲಿ ವಿದ್ಯಾಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧವಾಗುತ್ತಿರುವುದು.ಈ ಸೂತ್ರದಲ್ಲಿ ಗುರು ಇಲ್ಲದಿರುವುದುದನ್ನು ಗಮನಿಸಬೇಕು. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಗುರುವಿನ ಸ್ಥಾನ ಮಹತ್ವವನ್ನು ಕಳೆದು ಕೊಳ್ಳುತ್ತಿರುವುದನ್ನು ಈ ಸಂಸ್ಥೆಗಳು ನಡೆಸುವ ಪರೀಕ್ಷೆಗಳು, ಗುರುಗಳ ಬದಲಾಗಿ ಕೋಚಿಂಗ್ ಸೆಂಟರುಗಳ ಗುರುವಲ್ಲದ ತರಬೇತುದಾರರ ಮೇಲೆ ಹೆಚ್ಚು ಅವಲಂಬಿತರಾಗುವ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಮತ್ತೆ ಮತ್ತೆ ಪುಷ್ಟೀಕರಿಸುತ್ತಿದ್ದಾರೆ. ಎರಡನೇ ಸೂತ್ರ ವಿದ್ಯಾಭ್ಯಾಸದ ಗುರಿಯನ್ನು ನಿರ್ಧರಿಸುತ್ತದೆ.ಅದೆಂದರೆ ಉದ್ಯೋಗ.ಕೋರ್ಸಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಅದರಿಂದ ದೊರೆಯಬಹುದಾದ ಸಂಬಳದ ಪ್ಯಾಕೇಜಿನ ಮೇಲೆ ಅದು ನಿರ್ಧರಿಸಲ್ಪಡುತ್ತದೆ.ಇದಕ್ಕೆ ಮುಖ್ಯವಾಗಿ ಬೇಕಾಗಿರುವುದು ವಿದ್ಯಾರ್ಥಿ ಪಡೆಯುವ ಅಂಕಗಳು, ಅಗತ್ಯ ಸಂದರ್ಭದಲ್ಲಿ ಮಾಡಬಹುದಾದ ವಶೀಲಿ.ಇಲ್ಲಿಯೂ ಕೂಡ ಗುರುವಿನ ಮಾತೇ ಇಲ್ಲ. ಇಂತಹ ಅನೇಕ ಸೂತ್ರಗಳನ್ನು ಸಿದ್ಧಪಡಿಸುತ್ತ ಹೋಗಬಹುದು.ಪ್ರಯತ್ನಿಸಿ ನೋಡಿ.ಆದರೆ ಎಲ್ಲಿಯೂ ಗುರುವಿನ ಅಗತ್ಯತೆ ಕಂಡುಬರದಿರುವುದು ಇಂದಿನ ಶಿಕ್ಷಣ ವ್ಯವಸ್ಥೆಯ ವಾಸ್ತವ.ಆಚಾರ್ಯದೇವೋ ಭವ ಎಂದು ಗುರುವನ್ನು ದೈವತ್ವಕ್ಕೇರಿಸಿದ  ನಮ್ಮ ನಾಡಿನಲ್ಲಿ ಹೀಗೆ ಗುರುವಿನ ಸ್ಥಾನ ಗೌಣವಾಗಲು ಆರಂಭವಾದದ್ದು ತೀರ ಇತ್ತೀಚಿನ ವರ್ಷಗಳಲ್ಲಿ. ನಮ್ಮ ದೇಶದಲ್ಲಿ ಗುರುಕುಲ ಪದ್ಧತಿಯಲ್ಲಿ ಮಾತ್ರಇದ್ದ ಶಿಕ್ಷಣ ನಿಲುಕುತ್ತಿದ್ದುದು ಕೂಡ ಸಮಾಜದ ಉನ್ನತ ವರ್ಗಕ್ಕೆ ಸೇರಿದ ಕೆಲ ಗಣ್ಯಾತಿಗಣ್ಯರಿಗೆ ಮಾತ್ರ. ಕಾಲಾಂತರದಲ್ಲಿ ಆದ ಸಾಮಾಜಿಕ ಬದಲಾವಣೆಗಳಿಂದ, ಶೈಕ್ಷಣಿಕ ಕ್ರಾಂತಿಯಿಂದ.  ಶಿಕ್ಷಣ ಸಾರ್ವತ್ರಿಕವಾದದ್ದು ಆಧುನಿಕ ಭಾರತದ ಅತಿ ದೊಡ್ಡ ಸಾಧನೆ. ಆದರೆ ಸ್ವಾತಂತ್ರ್ಯಾನಂತರ ಆದ ಆರ್ಥಿಕ ಬದಲಾವಣೆಯ ಬಿರುಗಾಳಿಯಲ್ಲಿ ಶಿಕ್ಷಣ ಕ್ಷೇತ್ರವೂ ಸಿಲುಕಿ ಅದರ ವ್ಯಾಪಾರೀಕರಣವಾದದ್ದರಿಂದಲೇ ‘ಗುರು’ಸ್ಥಾನ ಈ ಹಿಂದಿನ ಮಹತ್ವವನ್ನು ಕಳೆದುಕೊಳ್ಳಲಾರಂಭಿಸಿತು.‘ ಹಿಂದೆ ಗುರುವಿದ್ದ; ಮುಂದೆ ಗುರಿ ಇತ್ತು. ಸಾಗುತಿತ್ತು ಧೀರರದಂಡು. ಇಂದು ಹಿಂದೆ  ಗುರುವಿಲ್ಲ; ಮುಂದೆ ಗುರಿ ಇಲ್ಲ. ಸಾಗುತಿಹುದು ರಣಹೇಡಿಗಳ ಹಿಂಡು’ ಎಂಬ ನುಡಿ ಶಿಕ್ಷಣ ಕ್ಷೇತ್ರಕ್ಕೆ ಬಿದ್ದ ಕೊಡಲಿಪೆಟ್ಟಿನಿಂದ ಘಾಸಿಗೊಂಡು ಆಡಿದ್ದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಈ ರಣಹೇಡಿತನವನ್ನೂ ಮೀರಿಸಿದ ಶಿಕ್ಷಣ ವ್ಯವಸ್ಥೆಗೆ ನಮ್ಮ ದೇಶ ಸಾಕ್ಷಿಯಾಗುತ್ತಿದೆ. ಉನ್ನತ ಶಿಕ್ಷಣದ ದೇಗುಲಗಳಾಗಿದ್ದ ವಿಶ್ವವಿದ್ಯಾಲಯಗಳೂ ಅನೀತಿಯ ತಾಣಗಳಾಗುತ್ತಿವೆ. ಶಿಕ್ಷಕರಿಂದಲೇ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚು ಹೆಚ್ಚು ದಾಖಲಾಗುತ್ತಿವೆ. ಈ ಪಿಡುಗು ಶಾಲೆ ಕಾಲೇಜುಗಳನ್ನೂ ಬಿಟ್ಟಿಲ್ಲ. ಇಂತಹ ವಾತಾವರಣದಲ್ಲಿ ನಲುಗುತ್ತಿರುವುದು ವಿದ್ಯೆಯೇ ಹೊರತು ಶಿಕ್ಷಕರಾಗಲೀ, ವಿದ್ಯಾರ್ಥಿಗಳಾಗಲೀ ಅಲ್ಲ. ಶಿಕ್ಷಕರಿಗೆ ಸಂಬಳ, ಭತ್ಯೆಗಳು, ಪರೀಕ್ಷಾ ಡ್ಯೂಟಿಗಳು, ಜೊತೆಗೆ ಒಂದಷ್ಟು ತರಗತಿಗಳಲ್ಲಿ ಪಾಠ ಇವಿಷ್ಟು ಶಿಕ್ಷಣ ವ್ಯವಸ್ಥೆಯಾಗಿ ಕಂಡರೆ ವಿದ್ಯಾಥಿಗಳಿಗೆ ಹಾಜರಿ ಹಾಗೂ ಪರೀಕ್ಷೆಗಳೇ ಶಿಕ್ಷಣ ವ್ಯವಸ್ಥೆಯಾಗಿವೆ. ಇದರಿಂದ ಸರಿಯಾದ ಶಿಕ್ಷಣ ಯಾವ ಹಂತದಲ್ಲೂ ದೊರೆಯದೇ ಇಡಿಯ ಶಿಕ್ಷಣ ವ್ಯವಸ್ಥೆ ಬಡವಾಗುತ್ತಿದೆ. ಅವ್ಯವಹಾರ, ಅನೈತಿಕತೆ ಈ ಶಿಕ್ಷಣ ವ್ಯವಸ್ಥೆಯಲ್ಲಿ ಅಟ್ಟಹಾಸವನ್ನು ಮೆರೆಯುತ್ತಿದೆ ಎಂದರೆ ತಪ್ಪಾಗಲಾರದು. ಪರೀಕ್ಷಾ ಗೊಂದಲಗಳು, ಪ್ರತಿವರ್ಷ ಕಾಡುವ ಪ್ರಶ್ನೆ ಪತ್ರಿಕೆ ಗೊಂದಲಗಳು, ಪರೀಕ್ಷೆಗೆ ಮುನ್ನವೇ ಅವುಗಳು ಬಯಲಾಗುವುದು, ಪರೀಕ್ಷಾ ನಂತರವೂ ಫಲಿತಾಂಶಗಳಲ್ಲಿ ಗೊಂದಲ, ಅವ್ಯವಹಾರಗಳು ಈ ವ್ಯವಸ್ಥೆಯನ್ನುಗುರುವಿನ ಹೊರತಾಗಿ ಬೇರೆ ಶಕ್ತಿಗಳು, ಪಟ್ಟಭದ್ರ ಹಿತಾಸಕ್ತಿಗಳು ಆಳುತ್ತಿರುವುದನ್ನು ಕಣ್ಣಿಗೆ ರಾಚುವಂತೆ ತೋರಿಸುತ್ತಿವೆ. ಈ ಹಿನ್ನೆಲೆಯಲ್ಲಿ ‘ಗುರು’ ಎಂಬ ಪದ ತನ್ನ ಗರಿಮೆಯನ್ನು ಕಳೆದುಕೊಂಡಿದೆ. ಕೇವಲ ಮೂರು ದಶಕಗಳ ಹಿಂದೆ ಗುರು-ಶಿಷ್ಯ ಸಂಬಂಧ ಭಯ-ಭಕ್ತಿಯ ಸಂಬಂಧವಾಗಿತ್ತು. ತಮ್ಮನ್ನು ಗೌರವಿಸುವ ಅಪಾರ ಶಿಷ್ಯವೃಂದ ಗುರುಗಳಿಗೆ ಇತ್ತು.ಇದು ಒಳ್ಳೆಯ ಶಿಕ್ಷಣ ವ್ಯವಸ್ಥೆಯ ಸೊಬಗು ಕೂಡ.ಗೌರವಕ್ಕೆ ಪಾತ್ರನಾಗುವ ಗುರು ಎಂದರೆ ಅವನು ತನ್ನ ಕರ್ತವ್ಯಗಳಿಗೆ ಚ್ಯುತಿ ಬಾರದಂತೆ ತನ್ನ ಶಿಷ್ಯವೃಂದಕ್ಕೆ ಸಲ್ಲಬೇಕಾದ ಸೇವೆಯನ್ನು ಸಲ್ಲಿಸಿದ್ದಾನೆ ಹಾಗೂ ಹೊಣೆಯನ್ನು ನಿಭಾಯಿಸಿದ್ದಾನೆ ಎಂದೇ ಅರ್ಥ. ಅದರಂತೆ ವಿದ್ಯಾರ್ಥಿಗಳೂ ಕೂಡ ಅಂತಹ ಗುರುವಿಗೆ ವಿಧೇಯರಾಗಿರುತ್ತಾರೆಂದರೆ ಅದು ಆ ಗುರುವೇ ಅವರಿಗೆ ನೀಡಿದ ಮಾರ್ಗದರ್ಶನದ ಮೂಲಕ ಎಂಬುದೂ ಕೂಡ ಸತ್ಯ. ಕಾಲ ಕಳೆದಂತೆ ಗುರು-ಶಿಷ್ಯ ಸಂಬಂಧದಲ್ಲಿ ಬದಲಾವಣೆ ಕಂಡು ಬರುತ್ತಪರಸ್ಪರ ಮಿತ್ರತ್ವದ ನೆಲೆಗೆ ಈ ಸಂಬಂಧವನ್ನು ತಂದು ನಿಲ್ಲಿಸಿತು.ಇದು ಕೂಡ ಬಹು ಸುಂದರವಾದ ಘಟ್ಟವೇ. ಏಕೆಂದರೆ ಆಜ್ಞಾಪಾಲಕ ವಿದ್ಯಾರ್ಥಿ ಸಂಸ್ಕೃತಿಯಿಂದ ಗೆಳೆತನಕ್ಕೆ ಒಗ್ಗಿಕೊಳ್ಳುವ ಸಖ್ಯ ಪರಂಪರೆ ಈ ಕಾಲದಲ್ಲೆ ಬೆಳೆಯಿತು.ಇತ್ತೀಚಿನ ದಿನಗಳಲ್ಲಿ ಇದೂ ಕೂಡ ಮಾಯವಾಗುತ್ತ ಎಲ್ಲವೂ ಕೇವಲ ವ್ಯಾವಹಾರಿಕ ನೆಲೆಗೆ ಬಂದು ನಿಂತಿರುವುದು ಶಿಕ್ಷಣ ವ್ಯವಸ್ಥೆಯ ಅರಾಜಕತೆಯನ್ನು ತೋರಿಸುತ್ತದೆ.ಇದಕ್ಕೆಲ್ಲ ಮುಖ್ಯ ಕಾರಣ ಈ ವ್ಯವಸ್ಥೆಯಲ್ಲಿ ಬದಲಾದ ಗುರುವಿನ ಸ್ಥಾನ ಮಾನ ಎಂದು ನನ್ನ ಅನಿಸಿಕೆ. ವಿದ್ಯಾರ್ಥಿಗಳಲ್ಲಿ ಆಶಿಸ್ತು ಹೆಚ್ಚುತ್ತಿದೆ. ವಿದ್ಯಾಲಯಗಳು ಅನೀತಿಯ ತಾಣಗಳಾಗುತ್ತಿವೆ ಎಂಬ ಹಳಹಳಿಕೆ ಕೇವಲ ಕ್ಲೀಷೆಯಾಗುತ್ತದೆ. ಈ ಸ್ಥಿತಿಗೆ ಶಿಕ್ಷಣ ಕ್ಷೇತ್ರವನ್ನು ವಿಧಿವತ್ತಾಗಿ ನೂಕಲು ಆರಂಭಿಸಿದ್ದು ಕೆಲ ದಶಕಗಳ ಹಿಂದಿನಿಂದಲೇ ಎಂಬುದು ನಮಗೆ ಅರಿವಿದ್ದರೂ ಅದನ್ನು ಪರಿಣಾಮಕಾರಿಯಾಗಿ ಬದಲಾಯಿಸುವ ಗೊಡವೆ ಆಡಳಿತವೂ ಸೇರಿದಂತೆಯಾರಿಗೂ ಬೇಡವಾದದ್ದು ಈ ದುರಂತಕ್ಕೆ ಕಾರಣ.ಈಗ ಹಿಂದಿರುಗಿ ಹೋಗಲಾರದಷ್ಟು ದೂರದ ದಾರಿಯಲ್ಲಿ ನಮ್ಮ ಶಿಕ್ಷಣ ವ್ಯವಸ್ಥೆ ಕ್ರಮಿಸಿಯಾಗಿದೆ.ಆದ್ದರಿಂದ ಆರಂಭದಲ್ಲಿ ಹೇಳಿದ ಸೂತ್ರಗಳಿಗೆ ಪರ್ಯಾಯವಾಗಿ ಸೂತ್ರಗಳನ್ನು ನಾವು ಸಿದ್ಧಪಡಿಸಬೇಕು.ಅವು ಜ್ಞಾನ ಹಾಗೂ ಗುರುವನ್ನು ಒಳಗೊಂಡಂತೆ ಇರಬೇಕು.ಶಿಕ್ಷಣದ ಮೂಲ ಉದ್ದೇಶ ಜ್ಞಾನವೇ ಹೊರತು ಉದ್ಯೋಗವಲ್ಲ. ಆ ಜ್ಞಾನ ಗುರುಮುಖೇನ ಬರುವಂತಾಗಬೇಕು. ಮಾತ್ರವಲ್ಲದೇ ಗುರುವೂ ಕೂಡ ತನ್ನ ಸ್ಥಾನ ಹಾಗೂ ಹೊಣೆಗೆ ಬದ್ಧತೆಯನ್ನು ಹೊಂದುವಂತಿರಬೇಕು.ಈ ಮಾತನ್ನು ಕ್ಲಾಸ್‌ರೂಂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹೇಳಬಹುದು.ಆದರೆಇಂದು ಶಿಕ್ಷಣ ಈ ಕ್ಲಾಸರೂಂ ಗೊಡವೆಯನ್ನು ದಾಟಿ ಅಂತರ್ಜಾಲದ  ಮೂಲಕ ಯಥೇಚ್ಛವಾಗಿ ದೊರೆಯುತ್ತಿದೆ. ಇಲ್ಲಿ ಗುರು-ಶಿಷ್ಯ ಪರಂಪರೆಗಿಂತ ನೀಡಲ್ಪಡುವ ಸಮಯ ಹಾಗೂ ಜ್ಞಾನಾಧಾರಿತ ವ್ಯಾವಹಾರಿಕ ಹಾಗೂ ಕೇವಲ ಲಾಭಾಧಾರಿತ ಶಿಕ್ಷಣಕ್ಕೆ ಮಾತ್ರ ಒತ್ತು ನೀಡಲಾಗಿದೆ.ಒಟ್ಟಿನಲ್ಲಿ ಶಿಕ್ಷಣ ಎಂದರೆ ಒಳ್ಳೆಯ ಸಂಬಳ ತರುವ ಉದ್ಯೋಗಕ್ಕೆ ರಹದಾರಿ ಎಂಬ ಸಿದ್ಧಸೂತ್ರ ಇಂದು ಪ್ರಚಲಿತದಲ್ಲಿರುವುದು ದಿಟ. ಮೊಗೆದಷ್ಟೂದೊರೆಯುವ ಮಾಹಿತಿಯ ಮಹಾಪೂರದ ಇಂದಿನ ದಿನಗಳಲ್ಲಿ ಒನ್‌ಟುಒನ್‌ ಟೀಚಿಂಗ್ ಬಹುತೇಕವಾಗಿ ನಶಿಸುತ್ತಿದೆ.ಆದರೆ ಶಿಕ್ಷಣ ಕ್ಷೇತ್ರದಲ್ಲಿ ತೆರೆದುಕೊಳ್ಳುತ್ತಿರುವ ಹೊಸ ಹೊಸ ದಾರಿಗಳು, ಅವಕಾಶಗಳು, ಇಂದಿನ ವಿದ್ಯಾರ್ಥಿಗಳ ಅಪ್ರತಿಮ ಸಾಮರ್ಥ್ಯ ಮೊದಲಾದವುಗಳನ್ನು ಖಂಡಿತ ಕಡೆಗಣಿಸುವಂತಿಲ್ಲ. ಶಿಕ್ಷಣಕ್ಕೆ ಇಂದು ಅಂತಾರಾಷ್ಟೀಯ ಆಯಾಮ ದೊರೆತಿದೆ.ಎಲ್ಲ ಸಂದರ್ಭಗಳಲ್ಲೂ ಬಂಡವಾಳಶಾಹಿ, ವಸಾಹತುಶಾಹಿ ದಾಳಿಯನ್ನು ತೀವ್ರವಾಗಿ   ಖಂಡಿಸುವ ನಾವು ಈ ಹೊಸ ಶಿಕ್ಷಣ ಆಯಾಮಕ್ಕೆ ಮಾತ್ರ ಬಂಡವಾಳಶಾಹಿಯೇ ಕಾರಣ ಎಂಬುದನ್ನೂ ಮರೆಯಬಾರದು. ಉತ್ತಮ ದರ್ಜೆಯ ಹಾಗೂ ವಿದೇಶದಲ್ಲಿ ಶಿಕ್ಷಣ ಉಳ್ಳವರಿಗೆ ಮಾತ್ರ ನಿಲುಕುತ್ತಿದ್ದ ಕಾಲ ಈಗ ಇಲ್ಲವಾಗಿದೆ.ಪ್ರತಿಭೆಗೆ ಸಲ್ಲಬೇಕಾದ ಪುರಸ್ಕಾರ ಸಲ್ಲುವ ಅವಕಾಶಗಳನ್ನೂ ಈ ಬಂಡವಾಳಶಾಹಿಯೇ ತೆರೆದಿದೆ.ಇದು ಸಧ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕಾಣ ಸಿಗುವ ಧನಾತ್ಮಕಗುಣ.ಅಂದ ಮಾತ್ರಕ್ಕೆ ವಿದೇಶೀ ಶಿಕ್ಷಣವೇ ಉನ್ನತ ಗುಣಮಟ್ಟದ್ದು ಎಂದಂತೂ ಅಲ್ಲ. ಭಾರತದಲ್ಲೂ ಇಂದು ಉತ್ಕೃಷ್ಟ ಮಟ್ಟದ ಶಿಕ್ಷಣ ನೀಡುವ ಅನೇಕ ಸಂಸ್ಥೆಗಳಿವೆ. ಮಾತು ಬಂದು ನಿಲ್ಲುತ್ತಿರುವುದು ಶಿಕ್ಷಣ ಸಂಸ್ಥೆಗಳಿಗೇ.ಗುರು ಮುಖ್ಯವಲ್ಲದ ಬದಲಾದ ಶಿಕ್ಷಣ ಸ್ವರೂಪದ ವಾಸ್ತವತೆಯನ್ನು ಒಪ್ಪಿಕೊಳ್ಳುವುದು ಇಂದಿನ ಶಿಕ್ಷಣ ವ್ಯವಸ್ಥೆಯ ಅಗತ್ಯ ಹಾಗೂ ಅನಿವಾರ್ಯ ಕೂಡ. ***********************************

ಗುರುವಿನ ಗರಿಮೆ Read Post »

ಇತರೆ, ಪ್ರಬಂಧ

ಶಿಶುತನದ ಹದನದೊಳು ಬದುಕಲೆಳಸಿ…

ಪ್ರಬಂಧ ಶಿಶುತನದ ಹದನದೊಳು ಬದುಕಲೆಳಸಿ… ಲಕ್ಷ್ಮಿ ನಾರಾಯಣಭಟ್ ಈ ಸುಂದರ ಮುಂಜಾನೆ ನನಗೆ ತುಂಬಾ ಪ್ರಿಯವಾದ ಹಾಡೊಂದರ ಸಾಲುಗಳು ನನ್ನ ಮನ:ಪಟಲದಲ್ಲಿ ಭಾವ ತರಂಗಗಳನ್ನು ಎಬ್ಬಿಸುತ್ತಿವೆ. ನಾನು ಹಾಡುಗಾರನಲ್ಲದಿದ್ದರೂ, ಈ ಸಾಲುಗಳಿಗೆ ದಯವಿಟ್ಟು ಕಿವಿಗೊಡಿ. ನೆನಪಿದೆಯೇ ನಿನಗೆ? ನಾವಿಬ್ಬರೂ ಅಂದು ಹೊಳೆಯ ದಡದಲ್ಲಿ ನಿಂದು ಮರಳು ಮನೆಗಳ ಕಟ್ಟಿ ಆಟವಾಡಿದ್ದು ನಿನಗೆ ನೆನಪಿದೆಯೇ ನಿನಗೆ? ಬಾ ಗೆಳೆಯ ಬಾರಯ್ಯಾ, ಆಟವಾಡೋಣ ಬಾಲ್ಯದ ನೆನಪನು ಮರಳಿ ಕಟ್ಟೋಣ. ನೆನಪಿದೆಯೇ ನಿನಗೆ? ನನಗೆ ಬೇಜಾರಾದಾಗಲೆಲ್ಲಾ ಈ ಸಾಲುಗಳನ್ನು ಗುಣುಗುಣಿಸುತ್ತೇನೆ. ಆಗ ಬಾಲ್ಯದ ದಿನಗಳು ಮತ್ತೆ ಜೀವ ತಳೆಯುತ್ತವೆ. ಕನಸುಗಳು ಗರಿಬಿಚ್ಚಿ ಕುಣಿಯತೊಡಗುತ್ತವೆ. ನೆನಪಿನ ದೋಣಿಯಲ್ಲಿ ತೇಲುತ್ತಾ, ಕಾಲಾತೀತ ಭಾವಪ್ರಪಂಚಕ್ಕೆ ಮನಸ್ಸು ತೆರೆದುಕೊಳ್ಳುತ್ತದೆ. ಆದರೆ ಯಾವುದೇ ದಿನಪತ್ರಿಕೆಯ ಮುಖಪುಟದ ಸುದ್ದಿ, ಅಂತೆಯೇ ಟಿವಿ ಚ್ಯಾನೆಲ್-ಗಳ ಆರ್ಭಟ ಓದಿದೊಡನೆ/ನೋಡಿದೊಡನೆ ಕನಸಿನ ಈ ಸುಂದರ ಲೋಕ ನುಚ್ಚುನೂರಾಗಿ ಹೋಗುತ್ತದೆ. ದುರಂತಗಳ ಸರಮಾಲೆ –- ರಾಜಕೀಯ ದೊಂಬರಾಟ, ರೇಪ್, ಕೊಲೆ, ಸುಲಿಗೆ, ವಂಚನೆ, ಭಯೋತ್ಪಾದನೆ, ಅಪಘಾತ, ಈಗಂತೂ ಕೊರೊನಾ ಕೊರೊನಾ ಸಹಸ್ರನಾಮ ಕಣ್ಣಿಗೆ ಹೊಡೆಯುವಂತೆ ರಾರಾಜಿಸುತ್ತಿರುತ್ತದೆ. ಕೇವಲ ಯೋಚಿಸಿದರೂ ಭಯ, ಜಿಗುಪ್ಸೆ ಹುಟ್ಟಿಸುವ ಮಾನವನ ಅತೀ ಆಸೆ, ತೀರದ ದಾಹ -– ಹಣ, ಅಧಿಕಾರ, ಭೋಗಲಾಲಸೆಗಳೇ ನಮ್ಮನ್ನು ಈ ದುಃಸ್ಥಿತಿಗೆ ದೂಡಿವೆ. ಇದಕ್ಕೆ ಕಾರಣ, ಪರಿಹಾರ ಏನೆಂದು ಯೋಚಿಸಬೇಡವೇ? ಜೀವ ಪ್ರಪಂಚದಲ್ಲಿ ಮನುಷ್ಯ ಮಾತ್ರ ಕನಸು ಕಾಣಬಲ್ಲ, ನಗಬಲ್ಲ ಅದ್ಭುತ ಸಾಮರ್ಥ್ಯ ಪಡೆದಿದ್ದಾನೆ. ಇತರ ಯಾವ ಪ್ರಾಣಿಯೂ – ಪ್ರಾಣ ಇರುವುದೆಲ್ಲವೂ ‘ಪ್ರಾಣಿ’ಯೇ – ನಗುವುದೂ ಇಲ್ಲ, ಕನಸು ಕಾಣುವುದೂ ಇಲ್ಲ. ಹುಲಿ, ಸಿಂಹಗಳಂತಹ ಕೂರ ಪ್ರಾಣಿಗಳೂ ಕೂಡಾ ಭಾವನೆಗಳಿಗೆ, ನಾವು ತೋರುವ ಪ್ರೀತಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತವೆ. ಇದಕ್ಕೆ ಏಕೈಕ ಅಪವಾದವೆಂದರೆ ಮನುಷ್ಯ ಪ್ರಾಣಿ ಮಾತ್ರ! ಪ್ರೀತಿಗೆ ದ್ರೋಹ; ನಂಬಿಕೆ, ವಿಶ್ವಾಸಕ್ಕೆ ಪ್ರತಿಯಾಗಿ ಮೋಸ, ದಗಲ್ಬಾಜಿ ಎಲ್ಲವನ್ನೂ – ತನ್ನವರನ್ನೂ ಸೇರಿಸಿ – ಭಾವನಾರಹಿತವಾಗಿ, ಅಷ್ಟೇ ಚಾಣಾಕ್ಷತನದಿಂದ ಮನುಷ್ಯ ಮಾಡಬಲ್ಲ. ಇಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಾದದ್ದು ಏನು ಎಂದರೆ ಯಾವಾಗ ಮನುಷ್ಯ ಕನಸು ಕಾಣುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾನೋ ಆವಾಗಲೆಲ್ಲಾ ಭಾವನೆಗಳಿಗೆ ಎರವಾಗುತ್ತಾನೆ. ಎಲ್ಲಿಲ್ಲದ ದುರಂಹಕಾರ ಆತನ ರಾಕ್ಷಸೀ ಪ್ರವೃತ್ತಿಯನ್ನು ಬಡಿದೆಬ್ಬಿಸಿ, ವಿನಾಶದಂಚಿಗೆ ಆತನನ್ನು ತಳ್ಳುತ್ತದೆ. ಸುನಾಮಿ, ಭೂಕಂಪಗಳಂತಹ ಪ್ರಕೃತಿ ವಿಕೋಪಗಳು, ಹಾಗೆಯೇ ನಮ್ಮನ್ನೆಲ್ಲಾ ಕಾಡುತ್ತಿರುವ ಕೊರೊನಾ ವೈರಸ್-ನಂತಹ ಮಹಾವ್ಯಾಧಿಜನಕ ಹೆಮ್ಮಾರಿಗಳು ಉಂಟುಮಾಡುವ ವಿನಾಶಕ್ಕಿಂತಲೂ ಹೆಚ್ಚು ದುರಂತವನ್ನು ಕೆಟ್ಟ ಮನಸ್ಸಿನ ಕೇವಲ ಒಬ್ಬನೇ ಒಬ್ಬ ಮನುಷ್ಯ ಮಾಡಬಲ್ಲ! ಇದರಿಂದ ಬಿಡುಗಡೆ ಬೇಕಾದರೆ, ಮನುಷ್ಯ ಮತ್ತೆ ತನ್ನ ಬಾಲ್ಯದ ಮುಗ್ಧ, ಸ್ನಿಗ್ಧ ಭಾವಪ್ರಪಂಚಕ್ಕೆ ಹಿಂತಿರುಗಬೇಕು. ಸಹಜ ಮುಗ್ಧತೆ, ನಗು, ನಲಿವು, ಸಂಭ್ರಮಗಳ ಆ ದಿನಗಳನ್ನು ಪುನಃ ಜೀವಂತಗೊಳಿಸಬೇಕು. ಕನಸು ಕಾಣಬೇಕು. ಇದಕ್ಕೆ ಪೂರಕವಾಗಿ ಸಾಹಿತ್ಯ, ಸಂಗೀತ, ನಾಟಕ ಇತ್ಯಾದಿ ಭಾವ ಪ್ರಧಾನ ಮಾಧ್ಯಮಗಳಲ್ಲಿ ಅಭಿರುಚಿ ಬೆಳೆಸಿಕೊಂಡು ಮನಸ್ಸನ್ನು ಉದಾತ್ತ ಭಾವಗಳತ್ತ ಹರಿಯಬಿಡಬೇಕು. ಕನಸು ಕಾಣುವ, ಶಿಶುವಿನೋಪಾದಿಯಲ್ಲಿ ನಿರ್ಮಲವಾಗಿ ನಗುವ ಸಹಜ ಪ್ರವೃತ್ತಿಗೆ ಮತ್ತೆ ಮರಳಬೇಕು. ಪ್ರಸಿದ್ಧ ಆಂಗ್ಲ ದಾರ್ಶನಿಕ ಕವಿ ವಿಲಿಯಂ ಬ್ಲೇಕ್-ನ (೧೭೫೭-೧೮೨೭) ‘Auguries of Innocence’ ಎಂಬ ಕವನದಲ್ಲಿ ಬರುವ ಈ ಸಾಲುಗಳನ್ನು ಗಮನಿಸಿ: It is right it should be so Man was made for Joy & Woe And when this we rightly know Thro the World we safely go ಕಷ್ಟ, ಸುಖಗಳನ್ನು ಅನುಭವಿಸಲೆಂದೇ ದೇವರು ಮನುಷ್ಯನನ್ನು ಸೃಷ್ಟಿಸಿ ಈ ಪ್ರಪಂಚಕ್ಕೆ ತಂದ. ಇದರಲ್ಲಿ ಮನುಷ್ಯನಿಗೆ ಆಯ್ಕೆಯ ಅವಕಾಶವೇ ಇಲ್ಲ. ಎರಡನ್ನೂ ಅನುಭವಿಸಬೇಕು. ಹಾಗಿದ್ದಾಗ ಅದನ್ನು ಸಮಚಿತ್ತದಿಂದ ಸ್ವೀಕರಿಸುವುದೊಂದೇ ದಾರಿ. ಮಗುವಿಗೂ, ಅನುಭಾವಿಗೂ ಇರುವ ಸಾಮ್ಯತೆ ಎಂದರೆ ಈ ಸಮಚಿತ್ತತೆ; ಅನುಭಾವಿ ನಕ್ಕು ಸುಮ್ಮನಾಗುತ್ತಾನೆ, ಮಗು ಅತ್ತು, ನಗುತ್ತದೆ. ಮರುಕ್ಷಣ ನಕ್ಕದ್ದೇಕೆ, ಅತ್ತದ್ದೇಕೆ ಎಂಬುದನ್ನು ಮರೆತುಬಿಡುತ್ತದೆ. ದೊಡ್ಡವರು ನಾವು ಹೀಗಲ್ಲ. ಎಂದೋ ಆಗಿ ಹೋದ ಘಟನೆಗಳನ್ನು ಮತ್ತೆ ಮತ್ತೆ ನೆನಪಿಸಿಕೊಂಡು ನಿತ್ಯ ದುಃಖಿಗಳಾಗುತ್ತೇವೆ. ವಿಸ್ಮಯ ಎಂದರೆ ಇದು ‘ಸುಖದ ಕ್ಷಣಗಳಿಗೆ’ ಅನ್ವಯವಾಗುವುದಿಲ್ಲ. ಎಂದೋ ಅನುಭವಿಸಿದ ಸುಖವನ್ನು ಮತ್ತೆ ಮತ್ತೆ ನೆನಪಿಸಿಕೊಂಡರೆ ಆಗುವುದು ದುಃಖವೇ ಹೊರತು ಸಂತೋಷವಲ್ಲ! ಬ್ಲೇಕ್-ನ ಕವನದ ಇನ್ನೊಂದೆರಡು ಸಾಲುಗಳನ್ನು ನೋಡೋಣ: The Childs Toys & the Old Mans Reasons Are the Fruits of the Two seasons ಮಗುವಿನ ಆಟಿಕೆಗಳೇ ಅದರ ಪ್ರಪಂಚ ಹಾಗೂ ಸರ್ವಸ್ವ. ಮಲಗಿ ನಿದ್ರಿಸುವಾಗಲೂ ಒಂದು ಗೊಂಬೆಯನ್ನೋ, ಅಥವಾ ಇನ್ಯಾವುದಾರೊಂದು ಆಟದ ವಸ್ತುವನ್ನೋ ಎದೆಗವಚಿಕೊಂಡು ಮಗು ಸುಖ ನಿದ್ರೆಗೆ ಜಾರುವುದನ್ನು ನಾವೆಲ್ಲಾ ಕಂಡವರೇ. ಅಂತೆಯೇ ಜೀವನ ಸಂಧ್ಯಾಕಾಲದಲ್ಲಿರುವ ಒಬ್ಬ ಹಿರಿಯ ತನ್ನ ಅನುಭವದಿಂದ ಮಾಗಿ, ಹಣ್ಣಾಗಿ, ಪಕ್ವವಾಗಿರುತ್ತಾನೆ. ಈಗ ಆ ಹಿರಿಯನ ನಿಜವಾದ ಗಳಿಕೆ, ಆಸ್ತಿ ಎಂದರೆ ಈ ಅನುಭವದ ಮೂಟೆಗಳೇ. ಅವು ಸುಖಾಸುಮ್ಮನೆ ಬಂದವುಗಳಲ್ಲ. ಪ್ರತಿಯೊಂದು ಅನುಭವದ ಹಿಂದೆಯೂ ಒಂದೊಂದು ಕಾದಂಬರಿಗಾಗುವಷ್ಟು ಸರಕು ಇದ್ದಿರಬೇಕು. ಅವನ ಮುಖದ ಸುಕ್ಕುಗಳೇ ಅದಕ್ಕೆ ಸಾಕ್ಷಿ. ಹಲ್ಲಿಲ್ಲದ ಬೊಚ್ಚು ಬಾಯಲ್ಲಿ ಅವನು ನಗುವಾಗ ಅದೆಷ್ಟೋ ಅನುಭವಗಳು ಸದ್ದಿಲ್ಲದೇ ತೂರಿಹೋಗುತ್ತಾವೋ ಏನೋ! ವಾರ್ಧಕ್ಯ ಎಂದರೆ ಮತ್ತೆ ಶಿಶುತನಕ್ಕೆ ಜಾರುವುದು: ಹಣ್ಣೆಲೆಯನ್ನು ನೋಡಿ ಚಿಗುರೆಲೆ ಹಾಸ್ಯ ಮಾಡುವುದೂ ಉಂಟು. ಸಂದಿಗ್ಧ ಕಾಲದಲ್ಲಿ ಕಿರಿಯನಾದವನು ಹಿರಿಯನೊಡನೆ ಪರಾಮರ್ಶೆ ಮಾಡುವುದೂ ಉಂಟು. ತೀರಾ ಚಿಕ್ಕವನಾದರೆ ಕಥೆ ಹೇಳು ಎಂದು ಗೋಗರೆಯುವುದೂ ಉಂಟು. ಹೀಗೆ ಮಗುವಿಗೂ ಮುದಿಯನಿಗೂ ಬಿಡಿಸಲಾರದ ನಂಟು ಉಂಟೇ ಉಂಟು. ಮಗುವಿಗೆ ಆಟವಾಡಲು ಓರಗೆಯ ಸಮವಯಸ್ಕ ಮಕ್ಕಳಿಲ್ಲದಿದ್ದರೆ ಒಳ್ಳೆಯ ಜತೆ ಅಂದರೆ ಆಜ್ಜ, ಅಜ್ಜಿಯೇ ಅಲ್ಲವೇ? ಏಕೆಂದರೆ ಇಬ್ಬರಿಗೂ ಸಮಯದ ಒತ್ತಡ, ಧಾವಂತ ಇಲ್ಲ. ಎಲ್ಲವನ್ನೂ ನಿಧಾನವಾಗಿ ಮಾಡಿದರಾಯಿತು, ಸಲ್ಪ ಹೆಚ್ಚು ಕಡಿಮೆಯಾದರೂ ಆಕಾಶ ಕಳಚಿ ಬೀಳುವುದಿಲ್ಲ ಎನ್ನುವ ವಾಸ್ತವ ಹಿರಿಯನಿಗೆ ಅನುಭವದಿಂದ ದಕ್ಕಿದರೆ, ಮಗುವಿಗೆ ಅದು ಸಹಜ ಪ್ರಾಪ್ತಿ. ಅದಕ್ಕಾಗಿಯೇ ಮರಳಿ ಬಾಲ್ಯಕ್ಕೆ ಹೋಗೋಣ. ಬದುಕಿನ ನಿತ್ಯದ ಜಂಜಾಟದಲ್ಲಿ ನಾವು ಕಳೆದುಕೊಂಡ ಆ ಶಿಶು-ಸಹಜ-ವರ್ತನೆಯನ್ನು ಮತ್ತೆ ಆವಾಹಿಸಿಕೊಳ್ಳೋಣ. ಇದು ಕೇವಲ ಹಗಲುಕನಸು, ಸಾಧಿಸಾಲಾಗದ ಗೊಡ್ಡು ಆದರ್ಶ, ಕೈಲಾಗದವ ಮೈ ಪರಚಿಕೊಂಡಂತೆ ಎಂದೆಲ್ಲಾ ಅಂದುಕೊಂಡು ಒಳಗೊಳಗೇ ನೀವೂ ನಗುತ್ತಿಲ್ಲ ತಾನೇ? ಸರಿ ಹಾಗಾದರೆ, ಈ ನೆವದಿಂದಲಾದರೂ ನಿಮ್ಮ ಮುಖದಲ್ಲಿ ಒಂದಿಷ್ಟು ಮುಗುಳ್ನಗೆ ಬಂತಲ್ಲ, ಅಷ್ಟೇ ಸಾಕು ನನಗೆ. ಈಗ ನೋಡಿ, ನಕ್ಕು ಹಗುರಾಗುವುದೊಂದೇ ಇದಕ್ಕಿರುವ ಪರಿಹಾರ ಎಂದು ನೀವೂ ನಂಬುತ್ತೀರಲ್ಲ? ಹಾಗಾದರೆ ಒಮ್ಮೆ ಜೋರಾಗಿ ನಕ್ಕುಬಿಡಿ. ************************************

ಶಿಶುತನದ ಹದನದೊಳು ಬದುಕಲೆಳಸಿ… Read Post »

ಇತರೆ

ನಾನು,ನನ್ನ ಅನುವಾದವೂ

ಅನುಭವ ನಾನು,ನನ್ನ ಅನುವಾದವೂ ಸಮತಾ ಆರ್. ಒಂದು ದಿನ ಸಂಜೆ ಹೀಗೇ ಸುಮ್ಮನೆ ಕುಳಿತಿರುವಾಗ ಗೆಳತಿ ಸ್ಮಿತಾಳ ಫೋನ್ ಕರೆ ಬಂತು,”ನೋಡೆ,ನನ್ನದೊಂದು ಕವನ ಇಂಗ್ಲಿಷ್ ಗೆ ಅನುವಾದ ಮಾಡಿಸಿದ್ದೇನೆ,ಓದಿ ಹೇಗಿದೆ ಹೇಳು”ಎಂದು ಹೇಳಿ ಹಿಂದೆಯೇ ವಾಟ್ಸಾಪ್ ನಲ್ಲಿ ಕನ್ನಡ ಇಂಗ್ಲಿಷ್ ಎರಡೂ ಪದ್ಯ ಕಳುಹಿಸಿದಳು.ಓದಿದಾಗ ಕನ್ನಡ ಪದ್ಯ ಇಂಗ್ಲಿಷ್  ಅನುವಾದದಲ್ಲಿ ಓದಲು ಚಂದವೆನಿಸಿ  ,ಅವಳಿಗೆ ಕರೆ ಮಾಡಿ ಹೇಳಿದೆ,ಅವಳು ಕೇಳಿ ,ತಮಾಶೆಗೆ,”ಹಾಗಾದರೆ ನನ್ನದೊಂದು ಪದ್ಯ ಕಳಿಸುವೆ, ನೀನೂ ಅನುವಾದಿಸಿ ಖುಷಿ ಪಡು”ಅಂತ ಹೇಳುವುದೇ!! ನಾನೂ ಏನೋ ಒಂದು ಲಹರಿಯಲ್ಲಿ “ಹುಂ” ಎಂದೇನೋ ಹೇಳಿಬಿಟ್ಟೆ ,ಆದರೆ ಅವಳ ಪದ್ಯ ಬಂದು ಕುಳಿತ ಮೇಲೆಯೇ ನಿಜವಾದ ತಲೆನೋವು ಶುರುವಾಗಿದ್ದು.  ಮೊದಲನೆಯದಾಗಿ ನಾನು ಬರಹಕ್ಕೆ ತೊಡಗಿಸಿಕೊಂಡಿದ್ದು ಕೂಡ ಆಕಸ್ಮಿಕವಾಗಿ,ಎಲ್ಲೋ ಒಂದಷ್ಟು ಲಹರಿ,ಲಲಿತ ಪ್ರಬಂಧಗಳ ಮಾತ್ರ ಬರೆದಿರುವುದು.ಓದಿದ್ದು ರಸಾಯನಶಾಸ್ತ್ರ,ಮಾಡುತ್ತಿರುವುದು ಗಣಿತ ಶಿಕ್ಷಕಿಯ ಕೆಲಸ,ಸಾಹಿತ್ಯವನ್ನು ಒಂದು ಹವ್ಯಾಸ ವೆಂಬಂತೆ ಸುಮ್ಮನೆ ನನ್ನ ಪಾಡಿಗೆ ನಾನು ಒಂದಷ್ಟು ಕನ್ನಡ ಕಥೆ,ಕಾದಂಬರಿ ಗಳ ಓದಿಕೊಂಡಿದ್ದೆ.ಕವಿತೆಗಳ ಓದು ಸ್ವಲ್ಪ ದೂರವೇ,ಏಕೆಂದರೆ ಓದಿದರೆ ಅರ್ಥವಾಗದ ಕಷ್ಟ.ಇದರ ಜೊತೆಗೆ ಇಂಗ್ಲಿಷ್ ಭಾಷೆಯ ಜೊತೆ ನಂಟು ಬೆಳದಿದ್ದು ಕೂಡ ಒಂದು ಆಕಸ್ಮಿಕವೇ.ನಾನು ವೃತ್ತಿ ಪ್ರಾರಂಭಿಸಿದ ಮೊದಲ ವರ್ಷಗಳಲ್ಲಿ ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರ ಕೊರತೆ ಯಿಂದಾಗಿ ,”ಹೇಗೂ ವಿಜ್ಞಾನ ದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ತನಕ ಇಂಗ್ಲಿಷ್ ನಲ್ಲೆ ಕಲಿತಿರುವುದಲ್ಲವೆ ?ನೀವೇ ಇಂಗ್ಲಿಷ್ ಪಾಠ ಮಾಡಿ “ಎಂದ  ಮುಖ್ಯ ಶಿಕ್ಷಕರ ಕೋರಿಕೆಯನ್ನು ಮನ್ನಿಸಿ   ಪ್ರಾರಂಭಿಸಿದ  ಇಂಗ್ಲಿಷ್  ಶಿಕ್ಷಕಿ ಕೆಲಸ ಸುಮಾರು ಹತ್ತು ವರ್ಷಗಳವರೆಗೆ ಎಳೆದುಕೊಂಡು ಹೋಯಿತು. ಈ ಅವಧಿಯಲ್ಲಿ ಮಕ್ಕಳಿಗೆ ಕಲಿಸುವುದರ ಜೊತೆಗೆ ನಾನೂ ಸಾಕಷ್ಟು ಕಲಿತೆ ಎಂದರೆ ತಪ್ಪಾಗಲಾರದು.ಅದರಲ್ಲೂ ಇಂಗ್ಲಿಷ್.ಪದ್ಯಗಳು, ರೈಮ್ಸ್ ಗಳ ಮಕ್ಕಳಿಗೆ ಕಲಿಸುತ್ತಾ ಕಲಿಸುತ್ತಾ ನಾನೇ ಹೆಚ್ಚು ಖುಷಿ ಪಟ್ಟಿದ್ದೇನೆ. ಈ ಹಿನ್ನೆಲೆಯಲ್ಲಿ ಸ್ಮಿತಾ ಕೊಟ್ಟ ಪದ್ಯದ ಅನುವಾದ ಮಾಡಲು ಕುಳಿತಾಗ ಮೊದಲು ಎದುರಾದ ಪ್ರಶ್ನೆ ಸೂಕ್ತ ಪದಗಳನ್ನು ಹುಡುಕುವುದು.ಈಗ ಯಾವುದೇ ಒಂದು ಭಾಷೆಯ ಒಂದು ಪದ ತೆಗೆದುಕೊಂಡರೆ ಅದು ಬರಿ ಒಂದು ಸರಳ ನೇರ ಅರ್ಥವನ್ನೇನು ಹೊಂದಿರುವುದಿಲ್ಲ.ಅದರ ಬಳಕೆಗೆ ಅನುಗುಣವಾಗಿ ಬೇರೆ ಬೇರೆ ಸಂದರ್ಭಗಳಲ್ಲಿ ಬೇರೆ ಬೇರೆ ಅರ್ಥ ಕೊಡುತ್ತಾ ಹೋಗುತ್ತದೆ.ಅಲ್ಲದೆ ಭಾಷೆ ಅನ್ನೋದು ಕೇವಲ ಒಂದು ಸಂಪರ್ಕ ಮಾದ್ಯಮ ಮಾತ್ರ ಅಲ್ಲ.ಒಂದು ಭಾಷೆ ಎಂದರೆ ನನಗನ್ನಿಸುವಂತೆ ಅದನ್ನಾಡುವ ಜನರ ಕಲೆ,ಸಂಸ್ಕೃತಿ, ಪರಂಪಾನುಗತವಾಗಿ ಬಂದಿರುವ ನಂಬಿಕೆ,ಆಚರಣೆಗಳು ಎಲ್ಲವೂ ಸೇರಿ ಆಗಿರುವ ಒಂದು ಜೀವಂತ ಪ್ರಕ್ರಿಯೆ ಭಾಷೆ.ಕೆಲವೊಂದು ರೂಡಿ ಆಚರಣೆಗಳು ಒಂದು ಪ್ರದೇಶ,ದೇಶ,ಇಲ್ಲವೇ ಒಂದು ನಿರ್ದಿಷ್ಟ ಜನಾಂಗಕ್ಕೆ ಸೀಮಿತವಾಗಿದ್ದು ಅವುಗಳ  ಸೂಚಿಸುವ ಪದಗಳು ,ಬೇರೊಂದು ಭಾಷೆಯನ್ನಾಡುವ,ಬೇರೆಯೇ ಪ್ರದೇಶಕ್ಕೆ ಸೇರಿರುವ, ಆ ನಿರ್ದಿಷ್ಟ ಆಚರಣೆ, ರೂಡಿಗಳು ಇರದೇ ಇರುವ ಜನರ ಭಾಷೆಯಲ್ಲಿ ಅವುಗಳ ಸೂಚಿಸುವ ಯಾವುದೇ ಪದಗಳು ಇಲ್ಲದಿರಬಹುದು. ಮೂಲಕ್ಕೆ ತೀರ ಹತ್ತಿರದ ಪದ ಬಳಸಿದರೂ ಅಪರಿಚಿತ ವೆನಿಸಬಹುದು.ಹಾಗಾಗಿ ಪದದ ಜೊತೆಗೆ ಅದಕ್ಕೆ ಸಂಬಂಧಿಸಿದ ಎಲ್ಲವನ್ನೂ ಇನ್ನೊಂದು ಭಾಷೆಯಲ್ಲಿ ಹೇಳುವುದು ಕಷ್ಟವೇ.ಉದಾಹರಣೆಗೆ ಹೇಳುವುದಾದರೆ ಸ್ಮಿತಾಳ ಒಂದು ಕವಿತೆಯಲ್ಲಿ ಕೊಡ ಅನ್ನುವ ಪದಕ್ಕೆ ಸಂವಾದಿಯಾದ ಇಂಗ್ಲಿಷ್ ಪದ ಹುಡುಕುವುದು ಬಹಳ ಕಷ್ಟವೇ ಆಯಿತು.ಬಾವಿಯಿಂದ ನೀರು ಸೇದಲು ಕೊಡ ಬಳಸುವ ಬದಲು ವಿದೇಶಗಳಲ್ಲಿ pail ಅನ್ನುವ ಬಕೆಟ್ ಆಕಾರದ ಪಾತ್ರೆ ಬಳಸುತ್ತಾರೆ.ಜ್ಯಾಕ್ ಅಂಡ್ ಜಿಲ್ ಪದ್ಯದಲ್ಲಿ ಬರುತ್ತೇ ನೋಡಿ.ಹಾಗೆ ಯಾವ ಶಬ್ದಕೋಶವನ್ನು  ಹುಡುಕಿದರೂ ಯಾವ ಪದವೂ ಸಮಾಧಾನ ತರದೆ ಕೊನೆಗೆ ಹತ್ತಿರ ಎನಿಸುವ pitcher ಬಳಸಿದ್ದಾಯಿತು. ಹಾಗೆಯೇ ಇನ್ನೂ ಕೆಲವು ಆಚರಣೆ ಗಳ ಗಮನಿಸಿದಾಗ,ಅಯ್ಯಪ್ಪನ ವ್ರತ  ನಮ್ಮ ದೇಶದ ಒಂದು ವಿಶಿಷ್ಟ ಆಚರಣೆ.ಶೋಭಾ ಹಿರೆಕೈ ಅವರ ಪದ್ಯದ ಅನುವಾದ ಏನೋ ಮಾಡಿದೆ,ಆದರೆ.ಅದು ಭಾರತೀಯ ರಲ್ಲದವರು ಓದಿದರೆ ಅವರಿಗೆ, ಆ ವ್ರತ ಮಾಡುವ ಕ್ರಮ,ಅದರ ಹಿನ್ನೆಲೆ,ಹಿಂದಿರುವ ವಿವಾದ ಇವುಗಳೆಲ್ಲ ಗೊತ್ತಿರದಿದ್ದರೆ ,ಕವನ ಅವರನ್ನು ಹೇಗೆ ತಲುಪೀತು?.    ಹಾಗೆಯೇ ಸುನೀತ ರವರ ಒಂದು ಪದ್ಯದಲ್ಲಿ ಬರುವ ಪಂಚಾಯತ್ ಪದ ಕೂಡ ಕಾಡಿಸಿತು.ಬೇರೆ ಬೇರೆ ದೇಶಗಳ ಆಡಳಿತ ವ್ಯವಸ್ಥೆ ಬೇರೆ ಬೇರೆ ಹಾಗಾಗಿ ಎಲ್ಲ ಕಡೆ ಹೊಂದುವಂಥ ಪದಕ್ಕಾಗಿ ತಡಕಾಡಿ, ಕೊನೆಗೆ council ಪದ ಬಳಸಿದರೂ ನನಗೆ ಅಷ್ಟು ಸಮಾಧಾನವಿಲ್ಲ. ಇನ್ನು “ಜಲರಾಶಿ”ಪದ ಬಂದಾಗ.ನನ್ನ ವಿಜ್ಞಾನ ಓದಿದ ತಲೆ “ಛೆ,ಕೇವಲ ಘನ ವಸ್ತುಗಳನ್ನ ಮಾತ್ರ ರಾಶಿ ಮಾಡಲು ಸಾಧ್ಯ,ದ್ರವಗಳನ್ನು ರಾಶಿ ಮಾಡಲಾದೀತೇ”ಎಂದು ಗುಮಾನಿ ಎಬ್ಬಿಸಿ,”ಪದ ಪದ ಅನುವಾದ ಬೇಡ ಬಿಡು “ಎಂದುಕೊಂಡು ಅದನ್ನು aquatic treasure ಮಾಡಿದ್ದಾಯಿತು. ಹಾಗೆ ಇನ್ನೊಂದೆರಡು ಕವನಗಳ ಅನುವಾದಿಸುವಾಗಾ ಇಂಗ್ಲಿಷ್ ಗ್ರಾಮರ್ ಸರಿಯಿದೆಯ?ಅನ್ನುವ ಸಣ್ಣ ಗುಮಾನಿ ಬೇರೆ ಕಾಡಿ ನನ್ನ ಕೆಲವು ಇಂಗ್ಲಿಷ್ ಶಿಕ್ಷಕ ಸ್ನೇಹಿತರನ್ನು ಕೇಳಿದಾಗ ಓರ್ವ ಸ್ನೇಹಿತೆ “ಗ್ರಾಮರ್ ಬಗ್ಗೆ ಎಲ್ಲಾ ತಲೆ ಕೆಡಿಸಿಕೊಳ್ಳಬೇಡಿ,ಪದ್ಯದ ಲಯ ತಪ್ಪದ ಹಾಗೆ,ಕೇವಲ ಪದದಿಂದ ಪದ ಅನುವಾದ ಮಾಡುವ ಬದಲು ಇಡಿಯಾಗಿ ಭಾವವನ್ನು ಹಿಡಿಯುವ ಪ್ರಯತ್ನ ಮಾಡಿ”ಎಂದು ಸಲಹೆ ಕೊಟ್ಟರು. ಅದರಂತೆ ಅನುವಾದಿಸಲು ಇರುವ ಕವನವನ್ನು ಮತ್ತೆ ಮತ್ತೆ ಓದಿಕೊಂಡು,ಅನುಮಾನ ಬಂದ ಕಡೆ ಮೂಲ ಕವಿಯ ಬಳಿಯೇ ಮಾತನಾಡಿ, ಮೊದಲಿಗೆ ಮೂಲ ಪದ್ಯ ಏನನ್ನ ಹೇಳಲು ಹೊರಟಿದೆ ಅನ್ನುವುದರ ಕಡೆಗೆ ಗಮನ ನೀಡಲು ಪ್ರಯತ್ನಿಸಿದೆ.ಅದರ ಬಳಿಕವೇ ನನ್ನ ಲಹರಿ ಉಕ್ಕಿದ ಹಾಗೆ ಅನುವಾದಿಸಿದೆ. ಬಳಿಕ ಅನುವಾದವನ್ನು ಮತ್ತೆ ಮತ್ತೆ ಓದಿಕೊಂಡು,ಮೂಲದ ಜೊತೆಗೆ ಹೋಲಿಸಿಕೊಂಡು ಸಾಧ್ಯವಾದಷ್ಟು ತಿದ್ದಿ ತೀಡಿ ನಂತರ ಮೂಲ ಕವಿಗೆ ತೋರಿಸಿ ಅವರು ಗ್ರೀನ್ ಸಿಗ್ನಲ್ ಕೊಟ್ಟ ಬಳಿಕವೇ ಸಮಾಧಾನ. ಕವಿತೆ ಯೊಂದನ್ನು ಅನುವಾದಿಸಲು ಕುಳಿತಾಗ ,ಗಣಿತ ಶಿಕ್ಷಕಿಯಾದ ನನಗೆ ಸಮೀಕರಣ ವೊಂದನ್ನು ಬಿಡಿಸಿದ ಹಾಗೆಯೇ ಅನ್ನಿಸುತ್ತದೆ.ಒಂದು ಸಮಸ್ಯೆ ಯನ್ನ ಅರ್ಥೈಸಿಕೊಂಡು,ಅದಕ್ಕೆ ಸೂಕ್ತ ನಿಯಮಗಳು,ಸ್ವಯಂ ಸಿದ್ಧಗಳ  ಬಳಸಿ , ಹಂತ ಹಂತವಾಗಿ ಬಿಡಿಸಿದಾಗ ಸಿಗುವ ಸಂತೋಷವೇ,ನನಗೆ ಕವಿತೆಯೊಂದನ್ನು ಅನುವಾದಿಸಿ ದಾಗ ಕೂಡ ಸಿಕ್ಕಂತಾಗುತ್ತದೆ. ಅನುವಾದಿಸಿದ ಬಳಿಕ  ಸಂಗಾತಿಯಲ್ಲಿ ಪ್ರಕಟಗೊಂಡು ಓದಿದವರಲ್ಲಿ ಕೆಲವರು ನನ್ನನ್ನು ಸಂಪರ್ಕಿಸಿ,”ಅನುವಾದ ಚೆನ್ನಾಗಿ ಮಾಡಿದ್ದೀರಿ,ಮುಂದುವರೆಸಿ “ಎಂದು ಪ್ರೋತ್ಸಾಹಿಸಿದಾಗ ತುಂಬಾ ಖುಷಿಯಾಯಿತು. ನಾನೆಂದೂ ಕವಿತೆ ಬರೆದವಳಲ್ಲಾ ಆದರೆ ಕವಿತೆ ಗಳ ಅನುವಾದ ಮಾಡಲು ಶುರು ಮಾಡಿದ ಬಳಿಕ ಕಾವ್ಯಕ್ಕಿರುವ ಅದ್ಭುತ ಶಕ್ತಿ ಯ ಅರಿವು ಸ್ವಲ್ಪ ಸ್ವಲ್ಪವೇ ಆಗುತ್ತಿದೆ.ಅನುವಾದದಿಂದಾಗಿ ಇನ್ನೊಬ್ಬರ ಭಾವ ಪ್ರಪಂಚದ ಒಂದು ತುಣುಕನ್ನಾದರೂ ನನ್ನದಾಗಿಸಿಕೊಳ್ಳುವ ಸಂಭ್ರಮ.ಇದೊಂದು ರೀತಿ ಕನ್ನಡದ ಪದ್ಯದಿಂದ ಬಸಿರಾಗಿ ಇಂಗ್ಲಿಷ್ ಮಗುವೊಂದನ್ನು ಹೆರುವಂತಹ ಬಾಡಿಗೆ ತಾಯಿಯ ಕೆಲಸದಂತಾಗಿ ಬಿಟ್ಟಿದೆ ನನಗೆ. *******************************

ನಾನು,ನನ್ನ ಅನುವಾದವೂ Read Post »

ಇತರೆ

ಪ್ರೇಕ್ಷಕ ಪರಂಪರೆಯ ಅನ್ನದಾತರು

ಲೇಖನ ಪ್ರೇಕ್ಷಕ ಪರಂಪರೆಯ ಅನ್ನದಾತರು ಮಲ್ಲಿಕಾರ್ಜುನ ಕಡಕೋಳ ಯಶಸ್ವಿ ನಾಟಕವೊಂದರ ಕುರಿತು ಮಾತಾಡುವಾಗ ಎಂಥವರಿಗೂ ಆಧುನಿಕ ರಂಗಭೂಮಿ ಸಂದರ್ಭದಲ್ಲಿ ನಿರ್ದೇಶಕ ಪರಂಪರೆಯತ್ತ ಆದ್ಯಗಮನ. ಹಾಗೇನೆ ವೃತ್ತಿರಂಗಭೂಮಿ ಸಂದರ್ಭದಲ್ಲಿ ನಟನ ಪರಂಪರೆಯದು ಧುತ್ತನೆ ನೆರವಿಗೆ ನಿಲ್ಲುವ ನಿಲುವು. ನಮ್ಮ ಪ್ರೊಸಿನಿಯಮ್ ಥಿಯೇಟರ್ ಪ್ರದರ್ಶನಗಳು ಪ್ರೇಕ್ಷಕರೆಂಬ ಐಕಾನ್ ಗಳ ಮೂಲಕವೇ ಸಾಂಸ್ಕೃತಿಕ ಮೌಲ್ಯ ಗಳಿಸಿವೆಯೆಂಬ ದ್ಯಾಸವೇ ಇರಲ್ಲ. ಅಷ್ಟು ಮಾತ್ರವಲ್ಲದೇ ರಂಗಸಂಸ್ಕೃತಿಯ ಅಭಿವೃದ್ಧಿ ಹಾಗೂ ವಿಕಾಸದ ಸಾಧ್ಯತೆಯ ಕ್ಷಿತಿಜ ವಿಸ್ತಾರಗೊಳ್ಳುವುದೇ ಪ್ರೇಕ್ಷಕ ಪ್ರಭುಗಳಿಂದ. ಇಂತಹ ಮಹತ್ತರ ಸಂಗತಿಗಳನ್ನೇ ನೇಪಥ್ಯಕ್ಕೆ ಜರುಗಿಸುವ ಜಾಣ ಕೆಲಸ ಕೆಲವು ರಂಗಪಂಡಿತರು ಎಸಗುತ್ತಾರೆ. ಅಷ್ಟೇಯಾಕೆ ಕೆಲವೊಮ್ಮೆ ಹ್ಯಾವಕ್ಕೆ ಬಿದ್ದಂತೆ ನಿರ್ದೇಶಕ ಹಾಗೂ ನಟನಾ ಪರಂಪರೆ ಕುರಿತೇ ಹೆಚ್ಚು ಹೆಚ್ಚು ಚರ್ಚೆಯ ಒಣಪಾಂಡಿತ್ಯ ಮೆರೆಯುತ್ತಾರೆ. ಸಿನೆಮಾ, ನಾಟಕ, ಭಾಷಣ, ಪುಸ್ತಕ ಇತರೆ ಎಲ್ಲ ಸಾಂಸ್ಕೃತಿಕ ಜ್ಞಾನಶಿಸ್ತು ಪ್ರದರ್ಶನಗಳ ಕುರಿತು ನಿಕಷದ ಚಿಂತನೆಗಳು ಅಭಿವ್ಯಕ್ತಿಯ ಸ್ವರೂಪ ಪಡೆದುಕೊಳ್ಳುವಾಗ ಪ್ರೇಕ್ಷಕ, ಕೇಳುಗ, ಓದುಗ ಸಹೃದಯತೆಯ ಮಹತ್ವದ ಸ್ಥಾನವನ್ನು ಅಲಂಕರಿಸುತ್ತಾನೆಂಬುದು ಮರೆಯಲಾಗದು. ನಮ್ಮ ಪರಂಪರಾಗತ ಸಂಕಥನ ಪಾಠ್ಯಗಳಲ್ಲಿ ಇದೆಲ್ಲ ಉಲ್ಲೇಖನೀಯ ವಿಷಯ . ಅದರಲ್ಲೂ ವಿಶೇಷವಾಗಿ ವೃತ್ತಿರಂಗಭೂಮಿಯಲ್ಲಿ ಹಲವು ಸಾಂಸ್ಕೃತಿಕ ಪರಂಪರೆಗಳು ಶಿಖರಪ್ರಾಯದ ಉಲ್ಲೇಖಿತ ಮಟ್ಟದಲ್ಲಿವೆ. ಅಲ್ಲಿ ಪ್ರಮುಖವಾಗಿ ನಟನಾ ಪರಂಪರೆ, ರಂಗ ಸಂಗೀತ ಪರಂಪರೆ, ರಂಗಸಜ್ಜಿಕೆಗಳ ಪರಂಪರೆಗಳು ಆಕರ ಸ್ಥಾನ ಪಡಕೊಂಡಿವೆ. ಅಷ್ಟೇ ಮಹತ್ವದ ಮತ್ತೊಂದು ಪರಂಪರೆ ಅಲ್ಲಿದೆ. ಅದುವೇ ಸಹೃದಯ ಪ್ರೇಕ್ಷಕ ಪರಂಪರೆ. ಎಷ್ಟೋ ಬಾರಿ ವೃತ್ತಿರಂಗಭೂಮಿಯ ನಾಟಕಗಳಲ್ಲಿ ಪ್ರೇಕ್ಷಕ ಅದೆಂತಹ ಮಹತ್ವ ಪಡೆದುಕೊಳ್ಳುತ್ತಾನೆಂದರೆ, ಕಲಾವಿದರು ನಾಟಕದ ನಡುವೆಯೇ ಪ್ರೇಕ್ಷಕರೊಂದಿಗೆ ಸಂಭಾಷಣೆಗೆ ಇಳಿಯುವ ಸನ್ನಿವೇಶಗಳು ಸ್ವಾಭಾವಿಕವಾಗಿ ಸೃಷ್ಟಿಯಾಗುತ್ತವೆ. ವೃತ್ತಿ ರಂಗದ ನಟನಟಿಯರು ಯಾವುದೇ ಮಡಿವಂತಿಕೆ ಇಲ್ಲದೇ ಕಾಕಾ, ಅಣ್ಣಾ, ಮಾಮಾ ಅಂತ ಪ್ರೇಕ್ಷಕರೊಂದಿಗೆ ಸಂಬೋಧನೆಗೆ ತೊಡಗುವ ಸಂದರ್ಭೋಚಿತ ಸನ್ನಿವೇಶಗಳು ನಗೆಗಡಲ ಜಳಕ ಮಾಡಿಸುತ್ತವೆ. ಇನ್ನು ಕಲಾವಿದರಿಂದ ಸುಪರ್ ಹಿಟ್ ಡೈಲಾಗ್ ಕೇಳಿದೊಡನೆ, ಅಂತಹದ್ದೇ ಮನಮೆಚ್ಚುಗೆಯ ರಂಗಸಂಗೀತ ಕೇಳಿದಾಗ ಸಂತುಷ್ಟರಾದ ಪ್ರೇಕ್ಷಕರು ಸಿಳ್ಳು, ಚಪ್ಪಾಳೆಗಳ ಸುರಿಮಳೆಗೈಯ್ಯುತ್ತಾರೆ. ಅದು ಅಷ್ಟಕ್ಕೆ ತಮಣಿಯಾಗದೇ ಪ್ರೇಕ್ಷಕಾಂಗಣದ ಸಂತಸ ಸಂಭ್ರಮದ ಎಲ್ಲೆ ಮೀರಿ ಒನ್ಸ್ ಮೋರ್ ಎಂದು ಭಾವ ಪರವಶರಾಗಿ ಜೋರಾಗಿ ಕೂಗುತ್ತಾರೆ. ಅವರ ಮೆಚ್ಚುಗೆಯ ಕೂಗಿಗೆ ಗೌರವತೋರಿ ಮತ್ತದೇ ಹಾಡು, ಡೈಲಾಗ್ ಮರುಕಳಿಸುತ್ತವೆ. ಹೀಗೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ಅಪರೂಪದ ರಂಗಸಂಸ್ಕೃತಿಯೊಂದರ ಸಂಪ್ರೀತಿಯ ಸಂವಾದ, ಸಂವಹನವೇ ಏರ್ಪಡುತ್ತದೆ. ವರನಟ ಡಾ. ರಾಜಕುಮಾರ ಅವರು ವೃತ್ತಿರಂಗಭೂಮಿಯ ರಂಗಮೌಲ್ಯ ಮೆರೆದ ಪ್ರಾತಃಸ್ಮರಣೀಯರು. ಅಂತೆಯೇ ಅವರು ಪ್ರೇಕ್ಷಕ ಪ್ರಭುಗಳಿಗೆ ಅಭಿಮಾನಿ ದೇವರುಗಳೆಂತಲೇ ಕರೆದು ಗೌರವ ತೋರುತ್ತಿದ್ದರು. ಮಾಸ್ಟರ್ ಹಿರಣ್ಣಯ್ಯನವರು ಯಾವತ್ತೂ ಪ್ರೇಕ್ಷಕರನ್ನು ಅನ್ನದಾತರೆಂದೇ ಬಾಯ್ತುಂಬಾ ಅಂತಃಕರಣ ತುಂಬಿ ಪ್ರೀತ್ಯಾದರ ತೋರುತ್ತಿದ್ದರು. ಏಣಗಿ ಬಾಳಪ್ಪ ಹಾಗೂ ಇನ್ನು ಕೆಲವು ಕಂಪನಿಗಳಲ್ಲಿ ಪ್ರೇಕ್ಷಕರಿಗೆ ಶರಣು ಹೇಳುವ ಸನ್ನಿವೇಶಗಳು ರಂಗಪ್ರಯೋಗದಂತೆ ಮಹತ್ವದ ಸ್ಥಾನ ಗಳಿಸಿದ್ದವು. ಕ್ಯಾಂಪ್ ಮಾಡಿದ ಊರುಗಳಲ್ಲಿ ಆಯ್ದ ಪ್ರೇಕ್ಷಕರಿಗೆ ಗೌರವಪಾಸ್ ನೀಡಿ ನಾಟಕಕ್ಕೆ ಆಮಂತ್ರಿಸುವ ಪದ್ಧತಿಯೇ ಇತ್ತು. ವೃತ್ತಿ ರಂಗಭೂಮಿಯ ಆರಂಭದ ಅಂದಿನಿಂದ ಇಂದಿನವರೆಗೂ ಒಂದೂವರೆ ಶತಮಾನ ಕಳೆದರೂ ಪ್ರೇಕ್ಷಕ ಮಹಾಶಯರ ಮೇಲಿನ ಗೌರವ, ಪ್ರೀತಿ, ವಿಶ್ವಾಸ ದಿನೇ ದಿನೇ ಹೆಚ್ಚುತ್ತಲೇ ಬಂದಿದೆ. ಅದೊಂದು ಅಮೂಲ್ಯ ಪರಂಪರೆ ಮಾತ್ರವಾಗಿ ಬೆಳೆಯದೇ ರಂಗಸಂಸ್ಕೃತಿಯ ಅನನ್ಯತೆಯಾಗಿ ಬೆಳೆಯುತ್ತಲೇ ಮುನ್ನಡೆ ಸಾಧಿಸಿದೆ. ಇಂತಹ ಸಹೃದಯ ಪರಂಪರೆ ಆಧುನಿಕತೆಯ ಬೇರೊಂದು ರಂಗಪ್ರಕಾರಗಳಲ್ಲಿ ಹುಡುಕಿದರೂ ನಮಗೆ ಕಾಣಸಿಗುವುದಿಲ್ಲ. ಪ್ರಾರಂಭಿಸಲ್ಪಟ್ಟ ನಾಟಕ ಇನ್ನೊಂದು ಮಹತ್ವದ ಸನ್ನಿವೇಶದೊಂದಿಗೆ ಮಂಗಲ ಹಾಡುತ್ತದೆ. ಯಾವತ್ತೂ ನಮ್ಮನ್ನು ಪ್ರೋತ್ಸಾಹಿಸಿ ನಮಗೆ ಅನ್ನ ನೀಡುತ್ತಿರುವ ತಂದೆ ತಾಯಿ ಸ್ವರೂಪಿ ಅನ್ನದಾತ ಪ್ರೇಕ್ಷಕ ಮಹಾಪ್ರಭುಗಳ ಅಡಿದಾವರೆಗಳಿಗೆ ಪೊಡಮೊಟ್ಟು…. ಎಂಬ ಸವಿನಯ ಪ್ರಾರ್ಥನೆಯ ಮಾತುಗಳು ಲೆಕ್ಚರ್ ಸೀನ್ ಎಂಬ ನುಡಿಗಟ್ಟಿನೊಂದಿಗೆ ಇವತ್ತಿಗೂ ಎಲ್ಲಾ ನಾಟಕ ಕಂಪನಿಗಳು ಪ್ರೇಕ್ಷಕ ಪರಂಪರೆಗೆ ಗೌರವಿಸುವ ಪರಿಪಾಠಗಳನ್ನು ತಪ್ಪದೇ ಪರಿಪಾಲಿಸುತ್ತಾ ಬಂದಿವೆ. ಇದು ರಂಗಸಂಸ್ಕೃತಿಯ ಮಹೋನ್ನತ ಪ್ರೇಕ್ಷಕ ಪರಂಪರೆಗೆ ಸಲ್ಲುವ ಗೌರವ **************************

ಪ್ರೇಕ್ಷಕ ಪರಂಪರೆಯ ಅನ್ನದಾತರು Read Post »

ಇತರೆ

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಜೊಸೆಫ್ ಸಿದ್ದಕಟ್ಟೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಗ್ರಾಮದ ಶ್ರೀ ಜೊಸೆಫ್ ಸಿದ್ದಕಟ್ಟೆಯವರು ಮಂಗಳೂರಿನ ಕಾರ್ಮೆಲ್ ಚರ್ಚಿನ ಫಾದರ್ ಆಗಿ ಸೇವೆ ಸಲ್ಲಿಸುತಿದ್ದಾರೆ. ಬಹಳ ಚಿಕ್ಕ ವಯಸ್ಸಿನಿಂದಲೇ ಬರವಣಿಗೆಯಲ್ಲಿ ತನ್ನನ್ನು ತೊಡಗಿಸಿಕೊಂಡು, ಕೊಂಕಣಿಯ ಯುವ ಕವಿ ಜೊಸಿ ಸಿದ್ದಕಟ್ಟೆ ಎಂಬ ಕಾವ್ಯನಾಮದಿಂದ ಅತ್ಯಂತ ಪ್ರಭಾವಶಾಲಿಯಾಗಿ ಹೊರಹೊಮ್ಮಿದ್ದಾರೆ. ಕಿಟಾಳ್ ಪತ್ರಿಕೆಯ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ “ಕಿಟಾಳ್ ಯುವ ಪರಸ್ಕಾರ್” 2011 ರಲ್ಲಿ, ಇನ್ನೊಂದು ಪ್ರತಿಷ್ಠಿತ ಪ್ರಶಸ್ತಿಯಾದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ್, 2013 ರಲ್ಲಿ ಜೊಸಿ ಸಿದ್ದಕಟ್ಟೆಯವರಿಗೆ ಲಭಿಸಿದೆ. ಸಾಹಿತ್ಯ ರಚನೆಗಳು: “ಪಾವ್ಸಾದೋಣು” ಕವಿತಾ ಸಂಕಲನ (2008) “ಮೋರಾನ್ ಸಾಂಡ್ಲೆಲಿ ಪಾಕಾಂ” ಕವಿತಾ ಸಂಕಲನ (2011) “ಉಜ್ಯಾ ತುಜ಼ೆ ವೇಂಗೇಂತ್” ಕವಿತಾ ಸಂಕಲನ (2015) ಯೂಟರ್ನ್ ( ಅಂಕಣ ಬರಹಗಳ ಸಂಕಲನ) ಕಾಜುಲೊ ( ನ್ಯಾನೋ ಕತೆಗಳ ಸಂಕಲನ) ಕಲ್ವಾರಿರ್ ರಾಜಿ ಸಂಧಾನ. ಇವಿಷ್ಟೂ ಪುಸ್ತಕಗಳು ಪ್ರಕಟಗೊಂಡು ಓದುಗ ವಲಯದೊಳಗೆ ಪ್ರಸಿದ್ಧಿಯನ್ನು, ಅಪಾರ ಮನ್ನಣೆಯನ್ನು ಪಡೆದಿವೆ. ನಾಟಕ ರಚನೆ , ನಿರ್ದೇಶನಗಳಲ್ಲೂ ತನ್ನನ್ನು ತೊಡಗಿಸಿಕೊಂಡಿರುವ ಫಾ| ಜೊಸಿ ಸಿದ್ದಕಟ್ಟೆಯವರು ಸಾಹಿತ್ಯದ ಎಲ್ಲಾ ಪ್ರಾಕಾರಗಳಲ್ಲೂ  ಕೈಯಾಡಿಸಿ ಪರಿಣಿತಿಯನ್ನು ಪಡೆದಿದ್ದಾರೆ. ಉದಾ: ಹೈಕು, ಗಝಲ್, ಇತ್ಯಾದಿ. ಜೊಸಿ ಸಿದ್ದಕಟ್ಟೆಯವರ ಎರಡು ಕವಿತೆಗಳು ನಿಮ್ಮ ಓದಿಗಾಗಿ: ಮೊರಾನ್ ಸಾಂಡ್ಲಲಿಂ ಪಾಕಾಂ – ಕುಮೆರಿಂತ್ ಮೊರಾನ್ ಸಾಂಡ್ಲಲಿಂ ಪಾಕಾಂ ಆರಾವ್ನ್ ಆರಾವ್ನ್ ಹಾಡ್ಲಿಂ ಥೊಡಿಂ ಧಾಕ್ಟಿಂ, ಕಾಂಯ್ ಥೊಡಿಂ ವ್ಹಡ್ಲಿಂ ಆನಿ ತಾಣಿಂಚ್ ಆಮ್ಚಿಂ ಮನಾಂ ಫೊಡ್ಲಿಂ ಬಬ್ಲಾನ್ ಏಕ್ ಪಾಕ್ ಚೊರುನ್ ವೆಲೆಂ ಮಿತ್ರಾಂಕ್ ದಾಕವ್ನ್ ಹರ್ಧೆಂ ಫುಲಂವ್ಕ್ ಬಯ್ಯಾನ್ ವಿಚಾರಿನಾಸ್ತಾಂ ಲಿಪಯ್ಲೆಂ ಏಕ್ ಬುಕಾಪಾನಾಂ ಇಡ್ಯಾಂತ್ ಪಿಲಾಂ ಕಾಡುಂಕ್ ದಾಟ್ಟುಕೀ ಏಕ್ ಜಾಯ್ ಆಸ್ಲೆಂ ಚಾಂಪ್ಯಾವನಾಂತ್ ಆಪೊವ್ನ್ ಗುಪ್ತಿಂ ‘ತಾಕಾ’ ದೀವುಂಕ್ ವರದಕ್ಕ ವಿಚಾರಿ ಮ್ಹಣ್ ಮಾಮ್ಮಿನ್ ದಿಲೆಂ ಕಿಸ್ಣಾಚ್ಯಾ ಮಾತ್ಯಾಕ್ ಖೊವಂವ್ಕ್ ಮಾಗೀರ್ ಉರಲ್ಲಿಂ ಮ್ಹಾಕಾ ಮೊಡ್ಕುರಿಂ ಆನಿ ರಡ್ಕುರಿಂ ಖಂಯ್ಚ್ಯಾ ಕರ್ಮಾಕ್? ಕೊಣೆಂ ಫಾರ್ಲಿಂ, ಕೊಣೆಂ ಲಿಪಯ್ಲಿಂ ತಾಚೆರ್ ಸೊಧ್ ಹಾಂವೆಂ ಚಲಯ್ಲೊ ‘ಹಾಂವೆಂ ಹಾಡಲ್ಲಿಂ ಪಾಕಾಂ ತುಮಿ ಕಶಿಂ ಚೊರ್ಲಿಂ?’ ಬಯ್ಯಾ ಹಾಸ್ಲೆಂ ‘ಹಾಡಲ್ಲಿಂ ವ್ಹಯ್, ಪುಣ್ ಮೊರಾನ್ ಸಾಂಡ್ಲಲಿಂ!’ ದೊಳ್ಯಾ ಖಾಂಚಿಂತ್ಲಿಂ ದುಕಾಂ ಪುಸುನ್ ಭಾಯ್ರ್ ಯೆತಾನಾ ಬೋಳ್ ರುಕಾರ್ ಭಿಜಲ್ಲೊ  ಕಾವ್ಳೊ ಆಂಗ್ ಪಾಪ್ಡುಂಕ್ ಲಾಗ್ಲೊ ಥೆಂಬೆ ಉಸಾಳ್ಳೆಚ್ ತೊ ಸುಶೆಗಾತ್ ಉಬ್ಲೊ -ಜೊ. ಸಿ. ಸಿದ್ದಕಟ್ಟೆ “ನವಿಲು ತೊರೆದ ಗರಿಗಳು” ಬಯಲಲ್ಲಿ ನವಿಲು ತೊರೆದ ಗರಿಗಳನ್ನು ಆರಿಸಿ ಆರಿಸಿ ತಂದಿದ್ದೆ. ಕೆಲವು ಚಿಕ್ಕವು, ಇನ್ನು ಕೆಲವು ದೊಡ್ಡವು, ಆಮೇಲೆ .. ಅವೇ ನಮ್ಮ ಮನಗಳನ್ನು ಒಡೆದವು. ಬಬ್ಲು ಒಂದು ಕದ್ದೊಯ್ದ ಅವನ ಗೆಳೆಯರಿಗೆ ತೋರಿಸಿ ಎದೆ ಉಬ್ಬಿಸಲು, ಅಕ್ಕ ಕೇಳದೆ ಎತ್ತಿಟ್ಟಳು ಪುಸ್ತಕದ ನಡುವೆ ಮುಚ್ಚಿಟ್ಟು ಮರಿ ಮಾಡಲು, ಅಣ್ಣನಿಗೂ ಒಂದು ಗರಿ ಬೇಕಿತ್ತು ಸಂಪಿಗೆ ವನದ ಮರೆಯಲ್ಲಿ “ಅವಳಿಗೆ” ಕೊಡಲು, ವರದಕ್ಕ ಕೇಳಿದರೆಂದು ಅಮ್ಮ ಕೊಟ್ಟಳು ಅವರ ಕೃಷ್ಣನ ತಲೆಗೆ ಸಿಕ್ಕಿಸಲು, ಇನ್ನು ನನಗೆ ಉಳಿದದ್ದು ಬರೀ ಹರಿದವು ಮತ್ತು ಮುರಿದವು …. ಯಾವ ಕರ್ಮಕ್ಕೆ?? ಯಾರ‍್ಯಾರೋ  ಮುಚ್ಚಿಟ್ಟರು, ಎತ್ತಿಟ್ಟರು, ಕದ್ದೊಯ್ದರು.. ಜೋರಾಗಿ ಗದರಿಸಿದೆ ಕೋಪ ತಡೆಯದೆ “ನಾನು ತಂದ ಗರಿಗಳವು.. ಹೇಗೆ ಕದ್ದಿರಿ ನೀವು?” ಅಕ್ಕ ನಗುತ್ತ… “ನೀನು ತಂದಿದ್ದು ಹೌದು.. ಆದರೂ… ನವಿಲು ತಾನೇ ತೊರೆದಿದ್ದು..?” ಕಣ್ಣಂಚಿನ ದುಃಖವನ್ನು ಒರೆಸಿ ಹೊರಗೆ ಬಂದಾಗ ಬೋಳು ಮರದಲ್ಲಿ ಕೂತ ಕಾಗೆಯೊಂದು ಪಟಪಟನೆ ರೆಕ್ಕೆ ಬಡಿಯುತ್ತ ಹನಿಗಳುದುರಿಸಿ ಹಾರಿಹೋಯಿತು…. ನಿರಾಳವಾಗಿ. —ಶೀಲಾ ಭಂಡಾರ್ಕರ್. ರಾಜಿನಾಮೊ ಪಿಕ್ಕಾಸ್ ಆನಿ ಖೊರೆಂ ನವ್ಯಾನ್ ಡ್ಯೂಟೆಕ್ ಹಾಜಿರ್ ಜಾಲಿಂ, ಫುಲಾ ತೊಟಾಂತ್. ಡ್ಯೂಟೆಕ್ ಲಾಗ್‍ಲ್ಲ್ಯಾ ಪಿಕ್ಕಾಸಾನ್ ಮೋವ್ ಆಸ್ಲೆಕಡೆ ಖೊಂಡುಂಕ್ ಸುರು ಕೆಲೆಂ ಖೊಂಡ್ಚ್ಯಾ ಹುಮೆದಿನ್ ಆಡ್ ಮೆಳ್‍ಲ್ಲೊ ಉದ್ಕಾ ಪೈಪ್‍ಯೀ ಉಕ್ಲುನ್ ಘಾಲೊ ದುಸ್ರೆದಿಸಾ ‘ಚತ್ರಾಯೆಸಂಗಿಂ’ ಪಿಕ್ಕಾಸಾಕ್ ಮುರೊ ಖೊಂಡುಂಕ್ ‘ಡ್ಯೂಟಿ’ ಘಾಲಿ, ಎಕೆಕ್ ಘಾಸಾಕೀ ದಾಂತಾಥಾವ್ನ್ ಕಿಟಾಳಾಂ ಉಸ್ಳೊನ್ ಹಿಂಸಾ ಜಾತಾಲಿ, ತಿತ್ಲ್ಯಾಕ್‍ಚ್ ಪಿಕ್ಕಾಸಾನ್ ‘ರಾಜಿನಾಮೊ’ ದಿಲೊ. ಪಿಕ್ಕಾಸಾನ್ ಖೊಂಡುನ್ ಗೆಲ್ಲೆಕಡೆ ಖೊರ್‍ಯಾಕ್ ಡ್ಯೂಟಿ ಲಾಗ್ಲಿ ಮಾತಿ ವೊಡ್ಚಿ, ಹದಾ ಕರ್‍ಚಿ ಮ್ಹೆಳೆಂ ಶೆಣ್ ವೊಡುನ್ ಘಾಲ್ಚೆಂ.. ತಿಕಾಯ್ ಹಿಂಸಾ ಜಾತಾಲಿ ತೆಂ ವಾತಾವರಣ್‍ಚ್ ನಾಕಾ ಆಸ್ಲೆಂ.. ತರೀ, ಆಪ್ಣಾಕುಶಿಕ್‍ಚ್ ಯೇವ್ನ್ ಪಡ್ಚ್ಯಾ ಮೆಳ್ಯಾಮದೆಂಯ್ ಖೊರೆಂ ರಾವ್ಲೆಂ, ‘ಗುಲೊಬಾಚ್ಯಾ ಪರ್ಮಳಾಕ್ ಲಾಲೆವ್ನ್’ ರಾಜಿನಾಮೆ ಹಾರೆ ಮತ್ತು ಗುದ್ದಲಿಗಳೆರಡೂ ಹೊಸದಾಗಿ ಡ್ಯೂಟಿಗೆ ಸೇರಿದವು ಹೂವಿನ ತೋಟದೊಳಗೆ. ಡ್ಯೂಟಿಯಲ್ಲಿ ತೊಡಗಿದ ಹಾರೆಯು ಮೆತ್ತಗಿರುವಲ್ಲಿ ಅಗೆಯಲು ಆರಂಭಿಸಿತು. ಅಗೆಯುವ ಹುಮ್ಮಸ್ಸಿನಲ್ಲಿ ಅಡ್ಡ ಬಂದ ನೀರಿನ ಪೈಪನ್ನೂ ಬಗೆದು ಹಾಕಿತು. ಮರುದಿನ ಮತ್ತೆ ಹಾರೆಗೆ ಎಚ್ಚರದಿಂದ ಕೆಲಸಮಾಡಲು ಎಚ್ಚರಿಸಿ ಕಲ್ಲಿರುವ ಕಡೆ ಅಗೆಯುವ ಡ್ಯೂಟಿ ಬಿತ್ತು. ಒಂದೊಂದು ತುತ್ತಿಗೊಂದೊಂದು ಕಿಡಿಗಳು ಹಲ್ಲಿನಿಂದ ಸಿಡಿಯುವಾಗ ಭಾರೀ ಹಿಂಸೆ ಅನಿಸಿತು. ಅಷ್ಟಕ್ಕೇ ಹಾರೆಯು ರಾಜಿನಾಮೆ ಕೊಟ್ಟಿತು. ಹಾರೆ ಅಗೆದು ಹೋಗಿದ್ದ ಕಡೆ ಈಗ ಗುದ್ದಲಿಯ ಡ್ಯೂಟಿ ಬಂತು. ಮಣ್ಣು ಅಗೆಯುವುದು ಹದಗೊಳಿಸುವುದು, ಸೆಗಣಿ ಹಾಕಿ ಮಟ್ಟ ಮಾಡುವುದು. ಅದಕ್ಕೂ ಹಿಂಸೆಯೇ ಇದು. ಈ ವಾತಾವರಣವೇ ಬೇಡ ಅನಿಸುತಿತ್ತು. ಆದರೂ.. ತನ್ನ ಬುಡಕ್ಕೆ ಬಂದು ಅಂಟುವ ಗಲೀಜಿನ ನಡುವೆಯೂ ಗುದ್ದಲಿ ಅಲ್ಲಿಯೇ ನಿಂತಿತ್ತು.. “ಗುಲಾಬಿಯ ಪರಿಮಳದ ಹಂಬಲದಿಂದ” ಕನ್ನಡಕ್ಕೆ: ಶೀಲಾ ಭಂಡಾರ್ಕರ್. ——————————————————— ಫೋಟೊ ಆಲ್ಬಂ ***************************************************************** ಚಿತ್ರ-ಬರಹ ಶೀಲಾ ಭಂಡಾರ್ಕರ್

ಕೊಂಕಣಿ ಕವಿ ಪರಿಚಯ Read Post »

ಇತರೆ

ಚಂಸು ಪಾಟೀಲ ಎಂಬ ‘ರೈತಕವಿ’

ಚಂಸು ಪಾಟೀಲ ಎಂಬ ‘ರೈತಕವಿ’ ಚಂಸು ಪಾಟೀಲ ಎಂಬ ‘ಪತ್ರಕರ್ತ’, ‘ರೈತಕವಿ’ಯೂ..!ಮತ್ತವನ ‘ಬೇಸಾಯದ ಕತಿ’ಯೂ.!! ನನ್ನ ಪ್ರೀತಿಯ ಗೆಳೆಯ ಚಂಸು ಪಾಟೀಲ ಮೊನ್ನೆ ಭೇಟಿಯಾಗಿದ್ದ ಹಾವೇರಿಯಲ್ಲಿ. ಚಂಸು ತನ್ನ ಇತ್ತೀಚಿನ ಪುಸ್ತಕವಾದ ‘ಬೇಸಾಯದ ಕತೆ’ ಓದಲು ನನಗೆ ಕೊಟ್ಟ. ನನಗೆ ಈ ‘ಬೇಸಾಯದ ಕತಿ’ ಓದುತ್ತಿದಂತೆ ಇದರ ಬಗೆಗೇನೆ ಒಂದು ಬರಹ ಮಾಡೋಣವೆನಿಸಿ ಒಂದು ಈ ಬರಹವನ್ನು ಮಾಡಿದೆ.ಈ ಚಂಸು ‘ರೈತಕವಿ’ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಆಗಿದೆ.ಅಷ್ಟೇ ಅಲ್ಲ ಈ ಚಂಸು ಪತ್ರಕರ್ತನೂ ಹೌದು. ಈ ಇವನ ಬಗೆಗಿನ ಮಾಹಿತಿ ಮತ್ತು ಬರಹ ಇಲ್ಲಿದೆ ನೋಡಿ… ಈ ಚಂಸುನು ಬೇಸಾಯದ ಬಗೆಗೆ ಲೇಖಕನಾಗಿ ದೂರದಿಂದ ಕಂಡು ಬರೆದಿಲ್ಲ. ಅದರ ಒಂದು ಭಾಗವಾಗಿಯೇ ಬರೆಯುತ್ತಾ ಹೋಗುತ್ತಾನೆ. ಸ್ವಯಂ ಕೃಷಿಗಿಳಿದಿರುವ ಈ ಚಂಸು ಬೇಸಾಯದ ಲಾಭ-ನಷ್ಟಗಳನ್ನು ಒಂದೆಡೆ ಹೇಳುತ್ತಾನೆ. ಹಾಗೆಯೇ ಕೃಷಿ ಬದುಕಿನ ಜೊತೆಗೆ ಸುತ್ತಿಕೊಂಡಿರುವ ಬೇರೆ ಬೇರೆ ಹಬ್ಬ, ಉತ್ಸವ ಇತ್ಯಾದಿಗಳನ್ನು ವಿವರಿಸುತ್ತಾನೆ. ಹಾಗೆಯೇ ಕೃಷಿಯ ಜೊತೆಗೆ ಅಂಟಿಕೊಂಡ ಸಂಬಂಧಗಳನ್ನೂ ತೆರದಿಡುವ ಪ್ರಯತ್ನ ಮಾಡುತ್ತಾನೆ. ಅಂದರೆ ಬೇಸಾಯದ ಬೇರೆ ಬೇರೆ ಮಗ್ಗುಲುಗಳು ಈ ಲೇಖಕನಿಂದ ಪರಿಚಯವಾಗುತ್ತಾ ಹೋಗುತ್ತದೆ. ಇದೇ ಸಂದರ್ಭದಲ್ಲಿ ನಾವಿಂದು ಯಾವ ಹಬ್ಬ ಹರಿದಿನ, ಉತ್ಸವಗಳನ್ನು ಆಚರಿಸುತ್ತಿದ್ದೇವೆಯೋ ಅವೆಲ್ಲವೂ ಬೇಸಾಯದಿಂದ ತನ್ನ ನಂಟನ್ನು ಕಳೆದುಕೊಂಡು ಸ್ವತಂತ್ರವಾಗುತ್ತಿರುವುದು, ಮತ್ತು ಕೃತಕ ಆಚರಣೆಯಾಗಿ‌ ಮುಂದುವರಿಯುತ್ತಿರುವುದನ್ನೂ ಈ ‘ಬೇಸಾಯದ ಕತಿ’ ಕೃತಿಯು ಚರ್ಚಿಸುತ್ತದೆ.ಶ್ರಾವಣದಿಂದ ಮಹಾನವಮಿಯವರೆಗಿನ ಹಬ್ಬಗಳಲ್ಲಿ ಮಣ್ಣನ್ನು ಪೂಜಿಸುವಂಥವೇ. ಮಣ್ಣೆತ್ತಿನ ಅಮವಾಸೆಗೆ ಮಣ್ಣೆತ್ತು ಮಾಡಿ ಪೂಜಿಸುವುದು. ನಾಗರ ಪಂಚಮಿಗೆ ಹುತ್ತಕ್ಕೆ ಹಾಲೆರೆಯುವುದು. ಗಣಪ ಕೂಡ ಮಣ್ಣೆ. ನಮ್ಮ ಅಡುಗೆ, ಉಡುಗೆ, ತೊಡುಗೆಗಳಿಗೆ ಬೇಕಾದ ಮೂಲ ಪದಾರ್ಥ, ಪರಿಕರಗಳನ್ನು ಒದಗಿಸುವ ಮಣ್ಣನ್ನು ಪೂಜಿಸುವ, ಮಣ್ಣಿನ ಋಣಕ್ಕೆ ಕೃತಜ್ಞತೆ ಸಲ್ಲಿಸುವ ಅರ್ಥಪೂರ್ಣ ಆಚರಣೆ. ಇಂತಹ ಹಲವು ಚಿಂತನೆಗಳು ಈ ಕೃತಿಯಲ್ಲಿದೆ… ಚಂಸು ಪಾಟೀಲ ಕೃಷಿಯನ್ನೇ ಜೀವನ ವಿಧಾನವಾಗಿ ಸ್ವೀಕರಿಸಿರುವ ಲೇಖಕ. ಚಂಸು ಪಾಟೀಲನು (ಚಂದ್ರಶೇಖರ ಸುಭಾಶಗೌಡ) ಮೂಲತಃ ರಾಣೇಬೆನ್ನೂರು ತಾಲೂಕಿನ ಕೂನಬೇವು (ಅಂಚೆ: ಕಜ್ಜರಿ) ಗ್ರಾಮದವನು. ಬಿ.ಎ. ಪದವೀಧರನು. ಕೆಲವು ಕಾಲ ನಾನು ಮೊದಲೇ ಹೇಳಿದಂತೆ ‘ಸಂಯುಕ್ತ ಕರ್ನಾಟಕ, ‘ಕ್ರಾಂತಿ’ ದಿನಪತ್ರಿಕೆಯಲ್ಲಿ ಹಾಗೂ ‘ನೋಟ’ ವಾರಪತ್ರಿಕೆಯಲ್ಲಿ ಸಹ ಸಂಪಾದಕರಾಗಿದ್ದವನು. ಕೃಷಿ ಸಮಸ್ಯೆ ಕುರಿತು ಬರೆದ ಕೃತಿಯಾದ ‘ಬೇಸಾಯದ ಕತಿ’ಯು ನನ್ನ ತೀರಾ ಮನಮುಟ್ಟಿದ ಕೃತಿಯಾಗಿದೆ. ಈ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ 2018 ರ ಸಾಲಿನ ಸಿಂಪಿ ಲಿಂಗಣ್ಣ ದತ್ತಿ ಪ್ರಶಸ್ತಿಯೂ ಲಭಿಸಿದೆ. ಇತನ ಇನ್ನುಳಿದ ಕೃತಿಗಳಾದ ‘ಗೆಳೆಯನಿಗೆ’ (1995), ‘ಕೆಂಪುಕಂಗಳ ಹಕ್ಕಿ ಮತ್ತದರ ಹಾಡು’ (2004), ‘ಅದಕ್ಕೇ ಇರಬೇಕು’ (2009) ಅಲ್ಲದೇ ಇವನ ಕವನ ಸಂಕಲನಗಳೂ ಓದಿಸಿಕೊಂಡು ಹೋಗುವ ಕೃತಿಗಳಾಗಿವೆ.ಪ್ರಸ್ತುತವಾಗಿ ಸದ್ಯ ತನ್ನ ಕುನಬೇವ ಗ್ರಾಮದಲ್ಲೇ ಕೃಷಿಕರಾಗಿನಾಗಿದ್ದಾನೆ. ಸ್ವಯಂ ರೈತಕವಿಯಾಗಿ ರೈತಾಪಿ ಜಗತ್ತಿನ ಕೃಷಿ ಜಾಗೃತಿಯಲ್ಲಿ ತೊಡಗಿಕೊಂಡಿದ್ದಾನೆ. ಇರಲಿ ಈಗ ಇವನ ಅತ್ಯುತ್ತಮ ಕೃತಿಯಾದ ಅಲ್ಲದೇ ನನಗೆ ತೀರಾ ಹಿಡಿಸಿದ ಕೃತಿಯಾದ ‘ಬೇಸಾಯದ ಕತಿ’ ಬಗೆಗೆ ನೋಡೋಣ… ‘ಬೇಸಾಯದ ಕತಿ’… ಚಂಸು ಪಾಟೀಲ ಎಂಬ ಯುವ ಲೇಖಕನ ತವಕ ತಲ್ಲಣಗಳ ಲೇಖನ ಸಂಗ್ರಹವಿದು ‘ಬೇಸಾಯದ ಕತಿ’. ಬಾಲಕನಾಗಿದ್ದಾಗ ಶಾಲೆಯಲ್ಲಿ ಇದ್ದಾಗಲೇ ಕವಿತೆ ಬರೆದ ಪಾಟೀಲ ಎಂಬತ್ತು-ತೊಂಬತ್ತರ ದಶಕದಲ್ಲಿ ಕನ್ನಡದ ಪ್ರಮುಖ ಬರಹಗಾರರನ್ನು ಓದಿ ಕೊಂಡಿದ್ದ ಕವಿ ಹೃದಯಿಗೆ ತಮ್ಮ ತಂದೆ ಆಧುನಿಕ ಕೃಷಿ ಪದ್ದತಿಯಿಂದ ಸಾಲದ ಸುಳಿಯಲ್ಲಿ ಬಿದ್ದು ವಿಲವಿಲ ಒದ್ದಾಡುವುದು ಕಂಡು ತಲ್ಲಣಿಸಿ ಹೋಗುತ್ತಾನೆ. ತನ್ನಜ್ಜನ ಪಾರಂಪರಿಕ(ಕೃಷಿ) ಕಮತದಿಂದ ನಿರುಮ್ಮಳವಾಗಿದ್ದು ಕಂಡ ಈ ತರುಣನಿಗೆ ತಾನು ಪಾರಂಪರಿಕ ಕಮತಕ್ಕೆ ಇಳಿದು ತನ್ನಪ್ಪನನ್ನು ಸಾಲದ ಸುಳಿಯಿಂದ ಹೊರತರಲು ಯತ್ನಿಸುತ್ತಾನೆ. ಇನ್ನು ಓದು ಓದಿಸುವೆ ಯಾವುದಾದರೂ ಕೆಲಸ ಹಿಡಿದು ಸುಖವಾಗಿರು ಎನ್ನುವ ತಂದೆ..!ಆದರೆ ನಿರಂತರ ಪರಿಶ್ರಮ, ಪ್ರಯತ್ನ ಮತ್ತು ಅಚಲವಾದ ಆತ್ಮವಿಶ್ವಾಸವೇ ಕೃಷಿ, ಇಂಥ ಕೃಷಿಯಿಂದಲೇ ಮೊದಲಾದದ್ದು ನಾಗರೀಕತೆ, ಸಂಸ್ಕೃತಿ ಇತ್ಯಾದಿ, ಹಾಗಾಗಿಯೇ ಕೃಷಿಗೂ ಸಂಸ್ಕೃತಿಗೂ ಅವಿನಾಭಾವ ಸಂಬಂಧವಿದೆವೆನ್ನುವ ಚಂಸು. ಕೃಷಿ ಹೊರತುಪಡಿಸಿದ ಸಂಸ್ಕೃತಿ ಪ್ರೇತವೆನ್ನುವ ಚಂಸುನು ಕೃಷಿಯಲ್ಲೇ ಉಜ್ವಲ ಮತ್ತು ಅರ್ಥಪೂರ್ಣ ಬದುಕು ಕಾಣಲು ಹಂಬಲಿಸಿ ಆ ಪ್ರಯತ್ನದಲ್ಲಿ ಸಫಲನೂ ಆಗುತ್ತಾನೆ..! ಸಂಸ್ಕೃತಿಯನ್ನು ಹೊರತುಪಡಿಸಿದ ಕೃಷಿ ಹೆಣಭಾರವೆನ್ನುವ ರೈತಕವಿ ಚಂಸು..! ಅಂದಂತೆಯೇಈಗ ಆಗಿರುವುದು ಹೀಗೆಯೇ.ಇಪ್ಪತ್ತು ವರ್ಷಗಳ ಹಿಂದೆ ಹೋದರೆ ಆಗ ಕೃಷಿ ಮತ್ತು ಸಂಸ್ಕೃತಿ ಯ ಸಂಬಂಧ ಅವಿನಾಭಾವ ಬಂಧವಿತ್ತು. ಅಲ್ಲಿಂದೀಚೆಗೆ ಇವೆರಡೂ ಪರಸ್ಪರ ವಿರುದ್ಧ ದಿಕ್ಕಿನತ್ತಲೇ ಸಾಗಿವೆ, ಈ ವೈರುಧ್ಯದ ಬದುಕೆ ಇವತ್ತು ನಮ್ಮ ರೈತರನ್ನು ಅಸಹಾಯಕರನ್ನಾಗಿಸಿದೆ. ಇನ್ನಿಲ್ಲದಷ್ಟು ಹತಾಶರನ್ನಾಗಿಸಿದೆ. ಶ್ರಾವಣದಿಂದ ಮಹಾನವಮಿವರಿಗಿನ ಹಬ್ಬಗಳೆಲ್ಲ ಮಣ್ಣನ್ನು ಪೂಜಿಸುವಂಥವೇ. ಮಣ್ಣೆತ್ತಿನ ಅಮಾವಾಸ್ಯೆಗೆ ಮಣ್ಣೆತ್ತು ಮಾಡಿ ಪೂಜಿಸುವುದು. ನಾಗರ ಪಂಚಮಿಗೆ ಹುತ್ತಕ್ಕೆ ಹಾಲೆರೆಯುವುದು. ಗಣಪ ಕೂಡಾ ಮಣ್ಣೆ..! ಇದು ಉಂಡುಟ್ಟು ಸಂಭ್ರಮಿಸಲಿಕ್ಕೇ ಮಾತ್ರ ಬೆಳೆದುಬಂದ ಪರಂಪರೆಯಲ್ಲ. ನಮ್ಮ ಅಡುಗೆ, ಉಡುಗೆ, ತೊಡುಗೆಗಳಿಗೆ ಬೇಕಾದ ಮೂಲ ಪದಾರ್ಥ..! ಪರಿಕರಗಳನ್ನು ಒದಗಿಸುವ ಮಣ್ಣನ್ನು ಪೂಜಿಸುವ, ಮಣ್ಣಿನ ಋಣಕ್ಕೆ ಕೃತಜ್ಞತೆ ಸಲ್ಲಿಸುವ ಅರ್ಥಪೂರ್ಣ ಆಚರಣೆ. ಈ ಆಚರಣೆಗಳನ್ನು ಬಿಟ್ಟಿಲ್ಲ. ಆದರೆ, ಇಂದು ನಂಬಿಕೆಗಳಿಗೆ ಮಣ್ಣು ಕೊಟ್ಟಿದ್ದವೆಂದು ‘ಬೇಸಾಯದ ಕತಿ’ಯಲ್ಲಿ ಹೇಳುವ ಚಂಸು ಒಬ್ಬ ಮಣ್ಣಿನ ಆರಾಧಕ, ರೈತಕವಿ ಅಂತಲೇ ನನ್ನ ಅಭಿಪ್ರಾಯ ಮಾತ್ರವಲ್ಲ ಈತನನ್ನು ತೀರ ಹತ್ತಿರದಿಂದ ಕಂಡ ಬಹು ಜನರ ಅನುಭವವೂ ಆಗಿದೆ. ಇನ್ನು ಮಣ್ಣಿನ ಸಂಸ್ಕೃತಿಯಿಂದ ದೂರ ಹೋಗಿರುವ ನಗರ ಪಟ್ಟಣಗಳಲ್ಲಿ ಈ ಹಬ್ಬಗಳು ಇನ್ನೂ ವಿಜೃಂಭಣೆಯಿಂದ, ವೈಭವದಿಂದ ಜರಗುವುದನ್ನು ನೋಡಿದರೆ ಇದೆಲ್ಲ ಹಾಸ್ಯಾಸ್ಪದ ಎನ್ನಿಸುತ್ತದೆ. ನಾವು ಇವತ್ತು ಮಾಡುವುದು ಸರಿ ಎಂದಿಟ್ಟುಕೊಳ್ಳೋಣ. ಮತ್ತೇಕೆ ಬೇಕು ನಮ್ಮೀ ಮಣ್ಣಿನ ದೇವರಿಗೆ ಹೋಳಿಗೆ. ಕಡುಬು ಪಾಯಸ..? ಎಂದು ಕೇಳುವ ಚಂಸು ಅವರಿಗೂ ಮೊನೋಕ್ರೋಟೋಫಾಸೋ, ಇಮಿಡಾಕ್ಲೋರಿಫೈಡೋ, ಯೂರಿಯಾವನ್ನೊ, ಡಿಎಪಿಯನ್ನೋ ನೈವೇದ್ಯವಾಗಿ ಅರ್ಪಸಬಹುದಲ್ಲವೆಂದು ಕೇಳುತ್ತಾನೆ..! ಹೀಗೆ ಕೇಳುವ ಈತನ ಪ್ರಶ್ನೆ ನಿಜಕ್ಕೂ ವಾಸ್ತವವಾದ ಪ್ರಾಕೃತಿಕ ಬದುಕಿನ ಪ್ರಶ್ನೆಯೇ ಆಗಿದೆ. ಇಷ್ಟೆಲ್ಲಾ ತಿಳುವಳಿಕೆ ಇರುವ ವ್ಯಕ್ತಿಗೇ ದಳ್ಳಾಳಿಗಳು ಮೋಸ ಮಾಡುತ್ತಾರೆ ಅಂದರೆ ನೀವು ನಂಬಲಿಕ್ಕಿಲ್ಲ!ಆ ಮೋಸಗಾರನಿಗೆ ಮೆಟ್ಟಿನಲ್ಲಿ ಹೊಡೆದು. ಪಟ್ಟಭದ್ರ ಹಿತಾಸಕ್ತಿಗಳ ನ್ಯಾಯ ಪಂಚಾಯಿತಿಯಲ್ಲಿ ಚಂಸು ಪಾಟೀಲನು ಗೆದ್ದು ಎದ್ದು ಬಂದಿದ್ದ ರೋಮಾಂಚಮಕಾರಿ ಅಧ್ಯಾಯವನ್ನು ನೀವು ಈ ‘ಬೇಸಾಯದ ಕತಿ’ ಕೃತಿಯನ್ನು ಓದಿಯೇ ತಿಳಿಯಬೇಕು. ಹಸಿರು ಕ್ರಾಂತಿ ನಮ್ಮ ಕೃಷಿಯನ್ನು ಮಾತ್ರ ಬದಲಿಸಿಲ್ಲ. ನಮ್ಮ ಆಚಾರ-ವಿಚಾರಗಳನ್ನು ಬದಲಿಸಿದೆ. ನಮ್ಮ ಬದುಕಿನ ನಂಬಿಕೆಗಳನ್ನು ನಮಗರಿವಿಲ್ಲದಂತೆಯೇ ಬುಡಮೇಲು ಮಾಡಿದೆ. ಈ ದ್ವಂದ್ವದ ಬದುಕು. ಆಧುನಿಕತೆಯ ಅತೀ ವ್ಯಾಮೋಹವೇಯಾಗಿದೆ. ಲಾಭ ಬಡುಕರ ಲಗಾಮಿನಲ್ಲಿ ಓಡುತ್ತಿರುವ ತಂತ್ರಜ್ಞಾನದ ಸುಳಿಯಲ್ಲಿ ನಾವು ನಮ್ಮತನವನ್ನು ಕಳೆದುಕೊಂಡಿದ್ದೆವೆಂದು ಪರಿತಪಿಸುವ ಚಂಸು ನಾವು ಹಬ್ಬಕ್ಕೆ ತಂದ ಹರಿಕೆಯ ಕುರಿಗಳಾಗಿದ್ದೆವೆಂದೇ ಪರಿತಪಿಸುತ್ತಾನೆ.ಮತ್ತೆ ಮತ್ತೆ ಮಾರ್ಕೆಟ್‌ ನ ತಳಿರಿಗೆ ಹಾತೊರೆಯುತ್ತಲೇ ಇದ್ದವೆಂದು ಗೋಳಿಡುತ್ತಾನೆ. ರೋಹಿಣಿ ಅಥವಾ ಮೃಗಶಿರಾ ಮಳೆ ಆಯಿತೆಂದರೆ ಮೆಣಸಿನ ಅಗಿ ಹಚ್ಚುವ ಹೊಲಕ್ಕೆ ಈರುಳ್ಳಿ ಚೆಲ್ಲಿ ಎರಡು ಎರಡೂವರೆ ಅಡಿ ಅಂತರದಲಿ ಸಾಲು ಎಬ್ಬಿಸುತ್ತಿದ್ದರು. ಅರಿದ್ರಾ ಮಳೆ ಬರುವಷ್ಟರಲ್ಲಿ ಎರಡು ದೊಡ್ಡ ಮಳೆ ಬಂದಿರೋದು ಭೂಮಿಯೂ ತಂಪಾಗಿ ವಾತಾವರಣದಲ್ಲಿ ತಂಪು ಸೂಸುತ್ತಿರುವ ಸಮಯವದು. ಜುಲೈ ತಿಂಗಳಿಗೆ ಆಗಲೇ ಮುಂಗಾರು ಆರಂಭವಾಗಿ ಪೂರ್ವಾಭಿಮುಖವಾಗಿ ಚಲಿಸುವ ನೈರುತ್ಯ ಮಾರುತದ ಮೋಡಗಳ ಪರಿಣಾಮ ದಿನಗಳಲ್ಲಿ ಆಗಾಗ ಮಳೆ ಸೆಳಕುಗಳು ಓಡಾಡುತ್ತಲೇ ಇರುತ್ತಿದ್ದವು. ಗಿಡ ಹಚ್ಚಲು ಇದು ಸೂಕ್ತ ಕಾಲ. ‘ಆದ್ರಿ ಮಳೆಗೆ ಹಚ್ಚಿದರೆ ಆರು ಕಾಯಿ ಹೆಚ್ಚು’ ಎಂಬ ಗಾದೇನೇ ಇದೆ .ಅರಿದ್ರಾ ಮಳೆ ಶುರುವಾಗುತ್ತಲೆ ಈರುಳ್ಳಿ ಚೆಲ್ಲಿದ ಹೊಲಕ್ಕೆ ಮೆಣಸಿನ ಕಾಯಿ ಅಗಿ ಹಚ್ಚುತ್ತಿದ್ದರು ಆಗ ಮತ್ತೇ ಆ ಹೊಲಕ್ಕೆ ಹುಬ್ಬಿ ಮಳೆ ಬಂದಾಗ ಸಣ್ಣ ಹತ್ತಿ ಅಂದರೆ ನಮ್ಮ ದೇಸಿ ಜೈಧರ ಹತ್ತಿ ಬೀಜ ಊರುತ್ತಿದ್ದರು. ಹೀಗೆ ಒಂದೇ ಹೊಲದಲ್ಲಿ ಬೇರೆ ಬೇರೆ ಕಾಲಮಾನಕ್ಕೆ ಮತ್ತು ಹವಾಮಾನಕ್ಕೆ ಬೆಳೆವ ಪ್ರಮುಖ ಮೂರು ಬೆಳೆಗಳನ್ನು ಅವರು ಅಂದರೆ ನಮ್ಮ ಹಿರಿಕರು ಬೆಳೆಯುತ್ತಿದ್ದರು. ಈಗ ಹೈಬ್ರಿಡ್ ಬಂದು ಮಿಶ್ರ ಬೆಳೆ ಹಾಳಾಯಿತು. ಹೈಬ್ರಿಡ್ ಹಾಗೂ ಬಿಟಿ ಬಂದ ಮೇಲೆ ಈ ಅಪೂರ್ವವಾದಂತಹ ಮಿಶ್ರ ಬೆಳೆ ಪದ್ದತಿಯೇ ಮೂಲೆಗುಂಪಾಯಿತು. ಏಕಬೆಳೆ ಪದ್ದತಿಯೇ ಸಾರ್ವಭೌಮವಾಯಿತು. ಬಂದರೆ ಸರಿ ಇಲ್ಲದಿದ್ದರೆ ಬರೆ ಬೀಳುವುದೂ ಸಾಮಾನ್ಯವಾಯಿತು ಎಂದು ರೈತಕವಿ ಚಂಸು ಪರಿತಪಿಸುತ್ತಾನೆ. ನಲವತ್ತು ವರ್ಷಗಳ ಹಿಂದೆ ಸುರುವಾದ ಬಾವಿ ನೀರಾವರಿಯ ಸಂದರ್ಭದಲ್ಲಿಯೇ ಹಸಿರು ಕ್ರಾಂತಿಯ ಘೋಷಣೆ ಮೊಳಗಿತು. ಆಗ ನನ್ನೂರಲ್ಲಿ ಸುಮಾರು ಇಪ್ಪತ್ತು-ಇಪ್ಪತ್ತೈದು ಬಾವಿಗಳಿದ್ದವು. ಆರಂಭದಲ್ಲಿ ಬಾವಿ ತುಂಬ ನೀರು ಇರುತ್ತಿತ್ತು. ಹಗಲಿಡೀ ವಿದ್ಯುತ್ ಇರುತ್ತಿತ್ತು. ಹೊಲಗಳೆಲ್ಲ ಹಸಿರಿನಿಂದ ಕಂಗೊಳಿಸುತ್ತಿದ್ದವು. ಸಂಜೆಗೆ ಬಾವಿ ಖಾಲಿಯಾದರೂ ಬೆಳಕು ಹರಿಯುವಷ್ಟರಲ್ಲಿ ಬಾವಿಗಳು ತುಂಬಿಕೊಳ್ಳುತ್ತಿದ್ದವುವೆನ್ನುವ ಚಂಸುನ ಈ ಮಾತು ಬರೀ ಚಂಸು ಊರಿಗೆ ಮಾತ್ರ ಸೀಮಿತವಾಗಿಲ್ಲ. ಕೃಷಿವೆನ್ನುದು ಎಲ್ಲಿದೆಯೋ ಅಲ್ಲಲ್ಲಿಲ್ಲೆಲ್ಲಾ ಸಂಬಂಧಿಸಿದ್ದೇಯಾಗಿದೆ. ಹಸಿರು ಕ್ರಾಂತಿ ಅಥವಾ ಆಧುನಿಕ ಕೃಷಿ ಅಮೇರಿಕೆಯ ಕುರುಡು ಅನುಕರಣೆಯೇ ಹೊರತು ಅದರಲ್ಲಿ ಬೇರೆ ಹುರುಳಿಲ್ಲ ಎಂಬುವುದ್ದಕ್ಕೆ ಇವತ್ತು ಪ್ರತಿ ದಿನವೂ ಸಂಭವಿಸುತ್ತಿರುವ ರೈತರ ಆತ್ಮಹತ್ಯೆಗಳೇ ಸಾಕ್ಷಿ. ಹಸಿರು ಕ್ರಾಂತಿಯನ್ನು ಜಾರಿಗೊಳಿಸುವಾಗ ಆದನ್ನು ಕನಿಷ್ಟ ನಮ್ಮತನಕ್ಕೆ ಹಾಗೂ ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಹೇಗೆ ಕಾರ್ಯಗತಗೊಳಿಸಬಹುದೆಂಬ ಕುರಿತು ಯೋಚಿಸಿ ಬೇಕಿತ್ತು.ಸಾವಿರ ಶತಮಾನಗಳ ಕೃಷಿ ಪರಂಪರೆಯ ನಾಡು ನಮ್ಮದು ಎಂಬ ಸಂಗತಿಯಾದರೂ ನೆನಪಿಗೆ ಬರಬೇಕಿತ್ತು. ಪರಿಸರ ನೈರ್ಮಲ್ಯ. ಜಲ ಸಂರಕ್ಷಣೆ. ಅರಣ್ಯ ರಕ್ಷಣೆಯ ಜೊತೆ ಜೊತೆಗೇನೇ ಕೃಷಿಯಲ್ಲಿ ಹೆಚ್ಚು ಇಳುವರಿಯ ಪಡೆಯುವ ಸಾದ್ಯತೆಗಳನ್ನು ಕಂಡುಕೊಳ್ಳಬಹುದಿತ್ತು. ಇವತ್ತು ದೇಶಕ್ಕೆ ಆಹಾರಭದ್ರತೆ ಇದೆ, ಆದರೆ ಅದನ್ನು ಬೆಳೆದು ಕೊಟ್ಟ ಕೃಷಿಕರ ಜೀವಕ್ಕೆ, ಜೀವನಕ್ಕೆ ಬೆಲೆ ಇಲ್ಲ ಅಂದ್ರೆ ಏನು ಅರ್ಥ? ಒಂದು ದೇಶ. ಅಲ್ಲಿನ ಸರ್ಕಾರ ಮತ್ತು ಆ ಸಮುದಾಯದ ಕೃತಘ್ನತೆಯ ವಿರಾಟ್ ಸ್ವರೂಪವಲ್ಲದೇ ಇದು ಮತ್ತೇನು..? ಎಂದು ಚಂಸು ಪಶ್ನಿಸುತ್ತಿರುವುದು ಸಕಾಲಿಕ ಸತ್ಯವೇ ಆಗಿದೆ. ಫುಕುವೋಕಾರ ‘ಒಂದು ಹುಲ್ಲಿನ ಕ್ರಾಂತಿ’ ಪ್ರಕಟವಾಗಿದ್ದು 1975ರಲ್ಲಿ. ಅದು ಕನ್ನಡಕ್ಕೆ ಬಂದಿದ್ದು 1988ರಲ್ಲಿ. ಫುಕುವೋಕಾ ಸಹಜ ಕೃಷಿಯ ಬಗ್ಗೆ ಮಾತಾಡಿ ೪೦ ವರ್ಷಗಳಾದವು. ಈ ನಲವತ್ತು ವರ್ಷಗಳ ನಂತರವೂ ನಾವು ಆಧುನಿಕ ಕೃಷಿಯನ್ನೇ ಅನಿವಾರ್ಯ ಎಂದುಕೊಂಡು, ಪ್ರಕೃತಿಗೆ ಮಾರಕವಾದ ಅದನ್ನೇ ಮುಂದುವರಿಸಿಕೊಂಡು ಹೊರಟಿದ್ದೇವೆ. ಇದು ಇರುಳು ಕಂಡ ಬಾವಿಗೆ ಹಗಲು ಬಿದ್ದರೆಂಬ ಗಾದೆಯನ್ನು ನೆನಪಿಸುವಂತದಾಗಿದೆ. ಇವತ್ತಿನ ಕೃಷಿಯಲ್ಲಿ ಕಾರ್ಮಿಕರ ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿದೆ. ಬಹುಶಃ ಸರ್ಕಾರದ ಉದ್ದೇಶವೂ ಇದೆ ಎಂದು ಹೇಳಲಾಗುತ್ತಿದೆ. ಕಾರ್ಪೊರೇಟ್ ವಲಯದ ನಿಯಂತ್ರಣಕ್ಕೆ ಬರುವ ರೀತಿಯಲ್ಲಿ ಕೃಷಿಯನ್ನು ಬಗ್ಗಿಸಲಾಗುತ್ತಿದೆ. ಅಥವಾ ಹಿಗ್ಗಿಸಲಾಗುತ್ತಿದೆ. ಸಂಪೂರ್ಣ ಯಾಂತ್ರೀಕರಣದ ನಂತರ ಕೃಷಿಯಲ್ಲಿ ಪಾಲ್ಗೊಳ್ಳುವ ಜನಸಂಖ್ಯೆಯನ್ನು ಶೇ 25 ರೊಳಗೆ ತರುವ ಪ್ರಯತ್ನಗಳ ಕುರಿತ ವರದಿಗಳಿವೆ. ಕೃಷಿಯಿಂದ ಹೊರಬಂದ ಶೇ 40ಕ್ಕೂ ಹೆಚ್ಚು ಜನರಿಗೆ ಬೇರೆ ಬೇರೆ ವಲಯಗಳಲ್ಲಿ ಸ್ಥಿರವಾದ ಉದ್ಯೋಗಗಳ ಲಭ್ಯತೆ ಸಾದ್ಯವೆ..? ಎಂದು ಚಂಸು ಪ್ರಶ್ನಿಸುತ್ತಾನೆ. ಆಗ ಊಟದ ವೇಳೆ ಎಂದರೆ ಹಿಂದಿ ವಾರ್ತಾ ಸುರುವಾಗುವ ಸಮಯ. ಅಲ್ಲಿಗೆ ರೇಡಿಯೋ ಬಂದ್ ಮಾಡಿ ಉಂಡು ಮಲಗಿಬಿಡುತ್ತಿದ್ದೆವು.ಟಿವಿ ಬಂದ ಮೇಲೆ ಅಪ್ಪ ಅವರಿವರ ಮನೆಗೆ ಹೋಗುವುದನ್ನು ನಿಲ್ಲಿಸಿಬಿಟ್ಟ. ಯಾರಾದರೂ ಮನೆಗೆ ಬಂದರೆ ಹಾಂ ಹೂಂ ಅಷ್ಟೇ ಮಾತುಕತೆ. ಎಲ್ಲರ ಕಣ್ಣು, ಮನಸು ಟಿವಿ

ಚಂಸು ಪಾಟೀಲ ಎಂಬ ‘ರೈತಕವಿ’ Read Post »

ಇತರೆ

ಕಸಾಪಗೆ ಮಹಿಳಾ ಅಧ್ಯಕ್ಷರು

ಕಸಾಪಗೆ ಮಹಿಳಾ ಅಧ್ಯಕ್ಷರು ಒಂದು ಚರ್ಚೆ ಇವತ್ತಿನ ಚರ್ಚೆಯಲ್ಲಿಅನಿಸಿಕೆ ತಿಳಿಸಿರುವವರು ಸುಧಾ ಆಡುಕಳ ಕ. ಸಾ. ಪ. ಕ್ಕೆ ,ಮಹಿಳಾ ಅಧ್ಯಕ್ಷರು ಯಾಕಿಲ್ಲ!!? ಕ. ಸಾ. ಪ. ಕ್ಕೆ ,       ಮಹಿಳಾ ಅಧ್ಯಕ್ಷರು ಯಾಕಿಲ್ಲ!!? ಸ್ಥಾಪನೆಯಾಗಿ ಶತಮಾನಗಳಾದರೂ ಇನ್ನೂ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ!?          ಇಂಥದೊಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ಚರ್ಚೆಯನ್ನಾರಂಭಿಸಿದ ಸಂಗಾತಿ ಪತ್ರಿಕೆಯ ನಿಲುವನ್ನು ತುಂಬು ಹೃದಯದಿಂದ ವಂದಿಸುತ್ತಲೇ, ನನ್ನ ಕೆಲವು ವಿಚಾರಗಳನ್ನು ಸ್ಪಷ್ಟಗೊಳಿಸಬಯಸುತ್ತೇನೆ. ಸಮಾನತೆಯೆಂಬುದು ಸುಲಭವಾಗಿ ರೂಢಿಸಿಕೊಳ್ಳುವ ವಿಷಯವಾಗಿದ್ದರೆ ಮಾನವ ಜನಾಂಗ ನಾಗರಿಕತೆಯ ಉತ್ಕೃಷ್ಟ ಹಂತವನ್ನು ತಲುಪಿದ ಇಂದಿನ ದಿನಗಳಲ್ಲಿಯೂ ಅಸಮಾನತೆಯ ಭಾರದಿಂದ ಕುಸಿಯುತ್ತಿರಲಿಲ್ಲ. ದಿನನಿತ್ಯದ ಸಣ್ಣಪುಟ್ಟ ಅವಕಾಶಗಳಲ್ಲೆಲ್ಲ ಸಮಾನತೆಯನ್ನು ಪ್ರತಿಪಾದಿಸುತ್ತ ಅದನ್ನು ಸಾಧಿಸಿಯೇ ಬಿಟ್ಟೆವು ಎಂಬ ಭ್ರಮೆಯಲ್ಲಿ ತೇಲಾಡಿಸುವುದು ಅಸಮಾನತೆಯ ಲೋಕರೂಢಿಯೇ ಆಗಿದೆ.        ನಿಜವಾದ ಸಮಾನತೆಯ ಪರೀಕ್ಷೆಯಾಗಬೇಕಾದದ್ದು ಅಧಿಕಾರದ ಹಂಚಿಕೆಯ ವಿಷಯದಲ್ಲಿ ಎಂಬುದನ್ನು ಉಪಾಯವಾಗಿ ಮರೆಮಾಚುತ್ತಾ ಅಥವಾ ಅದಕ್ಕೆ ತನ್ನದೇ ಅನೇಕ ಸಮಜಾಯಿಸಿಗಳನ್ನು ನೀಡುತ್ತಾ ಹೋಗುವುದು ಅನೂಚಾನವಾಗಿ ನಮ್ಮ ಸಮಾಜದ ನಡೆಯೇಆಗಿದೆ.       ಯಾವುದೇ ಅಧಿಕಾರಯುತವಾದ ಹುದ್ದೆಯ ಆಯ್ಕೆ ಚುನಾವಣಾ ರಾಜಕೀಯಕ್ಕಿಂತ ಭಿನ್ನವೇನಲ್ಲ. ಗ್ರಾಮ ಪಂಚಾಯಿತಿಯಲ್ಲಿ ಹೆಣ್ಣು ಮಕ್ಕಳಿಗೆ ಮೀಸಲಾತಿ ನೀಡಲು ತೆರೆದ ಮನಸ್ಸನ್ನು ಹೊಂದಿರುವ ವ್ಯವಸ್ಥೆ ಶಾಸಕ ಮತ್ತು ಸಂಸದರನ್ನು ಆಯ್ಕೆ ಮಾಡುವಾಗ ತೋರುವ ಅಸಮಾನತೆಯನ್ನು ಗಮನಕ್ಕೆ ತಂದುಕೊಂಡರೆಸಾಕು, ನಮ್ಮ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರ ದೊರಕುತ್ತದೆ. ಜಾತಿತಾರತಮ್ಯವನ್ನು ಅಳಿಸಿಬಿಟ್ಟಿದ್ದೇವೆಂದು ಭಾಷಣಮಾಡುತ್ತ, ಮನೆಗೆ ಬಂದವರಿಗೆ ತಮ್ಮದೇ ಪಕ್ಕದಲ್ಲಿ ಊಟವಿಕ್ಕುವ ಮಂದಿ ಮಕ್ಕಳ ಮದುವೆಯ ವಿಚಾರಕ್ಕೆ ಬಂದಾಗ ನಡೆದುಕೊಳ್ಳುವ ರೀತಿಯನ್ನು ಗಮನಿಸದರೂ ಸಾಕು. ಇವೆಲ್ಲವೂ ಸಮಾನತೆಯೊಳಗಿನ ಪೊಳ್ಳುತನವನ್ನು ಬಯಲಿಗೆಳೆಯುತ್ತಲೇ ಇರುತ್ತವೆ. ಸಮಾಜದಲ್ಲಿ ಪುರುಷ ಪ್ರಾಧಾನ್ಯವು ಅಳಿದು ಸಮಾನತೆಯ ತಂಗಾಳಿ ಬೀಸುತ್ತಿದೆ ಎಂಬ ಭ್ರಮೆಯಲ್ಲಿರುವ ನಮಗೆ ಅಧಿಕಾರದ ಪ್ರಶ್ನೆಗಳು ಬಂದಾಗಲೆಲ್ಲ ವಾಸ್ತವದ ಬಿಸಿಧಗೆ ಸೋಕುತ್ತಲೇ ಇರುತ್ತದೆ. ಆದರೆ ಇದು ನಮ್ಮ ದೇಶಕ್ಕೋ ಅಥವಾ ಒಂದು ಲಿಂಗಕ್ಕೋ ಸೀಮಿತವಾದ ವಿಷಯವೆಂದು ಅನಿಸುತ್ತಿಲ್ಲ. ಪ್ರಮಾಣದಲ್ಲಿ ಹೆಚ್ಚು ಕಡಿಮೆಯಿದ್ದರೂ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಸ್ರ್ತೀಯರು ಇಡಿಯ ಪ್ರಪಂಚದಲ್ಲಿ ಪಡೆದಿರುವ ಅಧಿಕಾರಯುತ ವಾದಸ್ಥಾನವನ್ನು ಲೆಕ್ಕ ಹಾಕಿದರೆ ನಾಚಿಕೆಯಿಂದ ತಲೆತಗ್ಗಿಸುವಂತಾಗುತ್ತದೆ. ರಾಹುಲಸಾಂಕೃತ್ಯಾಯನರವೋಲ್ಗಾ-ಗಂಗಾ ದಂತಹ ಪುಸ್ತಕವನ್ನು ಓದಿದರೆ ಅಧಿಕಾರದ ಹಂಬಲಕ್ಕಾಗಿ ತಾಯಿಯನ್ನೇ ಪ್ರವಾಹಕ್ಕೆ ದೂಡುವ ನಿಶೆಯರನ್ನು ಕಾಣುತ್ತೇವೆ ಮತ್ತು ಸಂತಾನೋತ್ಪತ್ತಿಯ ಕಾರಣಕ್ಕಾಗಿಯೇ ಇಡಿಯ ಗಣದ ಮುಖ್ಯಸ್ಥಳಾಗಿರುವ ಹೆಣ್ಣನ್ನು ಅವಳ ಆ  ಶಕ್ತಿಯನ್ನೇ ನಿಧಾನವಾಗಿ ದೌರ್ಬಲ್ಯವಾಗಿಸಿ ಮನೆಯ ಗೋಡೆಗಳ ನಡುವೆ ಬಂಧಿಸಿದ ಚರಿತ್ರೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಇಷ್ಟೆಲ್ಲವನ್ನು ಯಾಕೆ ಪ್ರಸ್ತಾಪಿಸಿದೆನೆಂದರೆ ಈ ಶಕ್ತಿರಾಜಕೀಯ ಎಂಬುದು ದೇಶ, ಕಾಲಗಳನ್ನು ಮೀರಿ ಸಮಾಜಕ್ಕೆ ಹಿಡಿದ ವ್ಯಾಧಿಯಾಗಿದೆ, ಎಂಬುದನ್ನು ತಿಳಿಸುವಕಾರಣಕ್ಕಾಗಿ ಅಷ್ಟೆ.           ಯಾರೇನೇ  ಹೇಳಿದರೂ ಹೆಣ್ಣು ಎಂಬ ಗೋಡೆಯೊಳಗಿನ ಜೀವ ಒಂಚೂರು ತನ್ನದೇ ಸಮಯವೆಂಬ ಬಿಡುವನ್ನು ಕಂಡುಕೊಂಡದ್ದು ವಿಜ್ಞಾನದ ಆವಿಷ್ಕಾರಗಳಿಂದಾಗಿ ಹುಟ್ಟಿಕೊಂಡ, ದೈನಂದಿನ ಕೆಲಸಗಳನ್ನು ಸುಲಭಗೊಳಿಸುವ ಅನೇಕ ಯಂತ್ರಗಳಿಂದ ಮಾತ್ರ. ಇಲ್ಲವಾದಲ್ಲಿ ಎಂಥಹ ಶಿಕ್ಷಣವೂ ಅವಳನ್ನು ಸಾಹಿತ್ಯ ರಚನೆಯೆಡೆಗೆ ಸೆಳೆಯುತ್ತಿತ್ತೆಂದು ನನಗನಿಸುತ್ತಿಲ್ಲ. ಹಾಗೆ ಸಿಕ್ಕಿದ ಬಿಡುವಿನ ವೇಳೆಯಲ್ಲಿ, ಅವಳ ಗಮ್ಯದ ಜಗತ್ತಿನ ಬಗ್ಗೆ ಬರೆಯುತ್ತಲೇ ಸ್ತ್ರೀಯರು ಇಂದು ಅದ್ಭುತವಾದ ಸಾಹಿತ್ಯದ ಕೃತಿಗಳನ್ನು ರಚಿಸಿದ್ದಾರೆ. ತಮ್ಮದೇ ಸಾಹಿತ್ಯಿಕ ಗುಂಪುಗಳನ್ನು ಮಾಡಿಕೊಂಡು ಇನ್ನಷ್ಟು ಜನರನ್ನು ತೆಕ್ಕೆಗೆ ಸೆಳೆದುಕೊಳ್ಳುತ್ತಿದ್ದಾರೆ. ಹೆಣ್ಣೊಬ್ಬಳು ಬರವಣಿಗೆಯಲ್ಲಿ ತೊಡಗಿರುವಳೆಂದು ಮನೆಯನ್ನು ಶಬ್ದಮುಕ್ತವಾಗಿಡುವ, ಅವಳ ಕೋಣೆಯಬಾಗಿಲನ್ನು ಶಬ್ದವಾಗದಂತೆ ದೂಡಿ ಕಾಲಕಾಲಕ್ಕೆ ಕಾಫಿತಿಂಡಿಗಳನ್ನು ಪೂರೈಕೆ ಮಾಡುವ, ಅವಳು ಬರೆದುದೆಲ್ಲವನ್ನು ಚಂದವಾಗಿ ಕೈಬರಹದಲ್ಲಿ ಅಥವಾ ಕಂಪ್ಯೂಟರ್ನಲ್ಲಿ ಕಾಪಿ ಮಾಡಿಕೊಡುವ ಎಷ್ಟು ಜನ ಸಂಗಾತಿಗಳಿದ್ದಾರೆಂದು ಚೂರು ಆತ್ಮ ವಿಮರ್ಶೆ ಮಾಡಿಕೊಂಡರೂ ಸಾಕು, ಮಹಿಳಾ ಸಾಹಿತ್ಯದ ಘನತೆ ತನ್ನಷ್ಟಕ್ಕೆ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುತ್ತದೆ. ತಮ್ಮ ಎಲ್ಲ ಕರ್ತವ್ಯಗಳನ್ನು ಮುಗಿಸಿ ರಾತ್ರಿಯನ್ನು ಕರಗಿಸಿ ಸಾಹಿತ್ಯವಾಗಿಸಿರುವವರ ಸಂಖ್ಯೆಯೇ ಹೆಚ್ಚಿದೆ. ಇವೆಲ್ಲವನ್ನೂ ನಾನು ಮಹಿಳಾ ಸಾಹಿತ್ಯಕ್ಕೆ ಮೀಸಲಾತಿ ಬೇಕೆಂಬ ನೆಲೆಯಲ್ಲಿ ಪ್ರಸ್ತಾಪಿಸುತ್ತಿಲ್ಲ. ಇಷ್ಟಾಗಿಯೂ ಸಾಹಿತ್ಯ ಕ್ಷೇತ್ರದಲ್ಲಿ ತನ್ನ ಛಾಪನ್ನು ಸರಿಸಮಾನವಾಗಿ ಸ್ಥಾಪಿಸಿಕೊಳ್ಳುತ್ತಿರುವ ಮಹಿಳೆಯರು ಅಧಿಕಾರದ ವಿಷಯಕ್ಕೆ ಬಂದಾಗ ಪ್ರಸ್ಥಾಪವೇ ಆಗದಿರುವ ವಿಷಾದದ ಬಗೆಗಷ್ಟೆ ಈ ಮಾತು.          ನಿಜವಾಗಿ ನೋಡಿದರೆ ಇಂಥದೊಂದು ಪ್ರಸ್ತಾಪ ಪುರುಷ ಸಾಹಿತಿಗಳಿಂದಲೇ ಒಕ್ಕೊರಲಿನಿಂದ ಬರಬೇಕಾದುದು ಇಂದಿನ ತುರ್ತು.  ಮಹಿಳೆಯೊಬ್ಬರನ್ನು  ಕ. ಸಾ. ಪ. ದ  ಅಧ್ಯಕ್ಷಸ್ಥಾನದಲ್ಲಿ ಈ ಸಲವಾದರೂ ನಾವು ಕಾಣಬೇಕು ಎಂದು ಎಲ್ಲರಿಗೂ ಅನಿಸಲೇಬೇಕು. ಚುನಾವಣೆಯ ಹಂಗೇಕೆಂದು ಬಲಾವಣೆಗಾಗಿ ಅವಿರೋಧವಾಗಿ ಮಹಿಳಾ ಅಧ್ಯಕ್ಷರನ್ನು ಆರಿಸಬಹುದು. ಒಬ್ಬರಿಗಿಂತ ಹೆಚ್ಚು ಮಹಿಳಾ ಸ್ಪರ್ಧಿಗಳಿದ್ದರೆ ಅದೂ ಒಳಿತೆ. ಚುನಾವಣೆ ನಡೆಯಲಿ. ಮಹಿಳಾ ಸ್ಪರ್ಧಿಗಳ ನಡುವೆ ನಡೆವ ಸ್ಪರ್ಧೆಯಲ್ಲಿ ಆಯ್ಕೆಯಾದವರು ಅಧ್ಯಕ್ಷರಾಗಲಿ. ಶತಮಾನದಿಂದ ನಡೆದು ಬಂದಿರುವ ಗಂಡಾಳ್ವಿಕೆಯನ್ನು ಬಿಡುವುದರಲ್ಲಿರುವ ಸುಖವನ್ನು ನಮ್ಮ ಪುರುಷರು ಒಮ್ಮೆ ಅನುಭವಿಸಲಿ ಎಂಬುದು ನನ್ನಾಸೆ.ಅದರ ಬದಲು ಮಹಿಳೆಯರ ಆಯ್ಕೆಗೆಂದು ಮೀಸಲಾತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ತರುವುದು ಬೇಡ. ಹಾಗೆ ತರಲೇಬೇಕೆಂದಾದಲ್ಲಿ ಅದು ಮೊದಲು ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ಬರಲಿ.ಪ್ರಜ್ಞಾವಂತರೆಂದು ಜನರಿಂದ ಗುರುತಿಸಲ್ಪಡುವ ಸಾಹಿತ್ಯ ಕ್ಷೇತ್ರವೂ ಯಾಕೆ ಮೀಸಲಾತಿಯ ಹೇರಿಕೆಯಿಂದ ಸಮಾನತೆಯನ್ನು‌ ಸಾಧಿಸಬೇಕು?        ತೀರ ಮುಜುಗರದಿಂದಲೇ ನಾನಿದನ್ನು ಪ್ರಸ್ತಾಪಿಸುತ್ತಿರುವೆ. ಶಾಲಾ, ಕಾಲೇಜುಗಳ ಹಂತದಿಂದ ಹಿಡಿದು ನಡೆಯುವ ಸಭೆ, ಸಮಾರಂಭಗಳನ್ನು ಗಮನಿಸಿದರೂ ಸಾಕು. ಸಾರ್ವಜನಿಕ ಕಾರ್ಯಕ್ರವಗಳಲ್ಲಿ ಸ್ರ್ತೀ ಯರಿಗೆ ನಾವು ಕೊಡುವ ಪ್ರಾಧಾನ್ಯತೆಯ ಅರಿವಾಗುತ್ತದೆ. ಎಲ್ಲೋ ಸಭೆಯ ಮೂಲೆಯಲ್ಲೊಂದು ಕುರ್ಚಿಯಲ್ಲಿ ಮಹಿಳೆಯೊಬ್ಬರು ಕುಳಿತಿದ್ದರೆ ಹೆಚ್ಚು. ನಡುವೆ ಕುಳಿತಿದ್ದಾರೆಂದರೆ ಅದು ಅವರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಸಫಲತೆಯ ಕಾರಣದಿಂದ ಮಾತ್ರ. ಆದರೆ ಸಾಹಿತ್ಯದಂತಹ ಸೃಜನಶೀಲ ಮತ್ತು ಭಿನ್ನ ಶಾಖೆಗಳನ್ನೊಳಗೊಂಡ ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದೂ ಅಷ್ಟು ಸಮಂಜಸವೆನಿಸದು. ಬಾಲ್ಯದಿಂದಲೂ ಪುರುಷ ಪ್ರಾಧಾನ್ಯದ ಛತ್ರದಡಿಯಲ್ಲಿಯೇ ಬೆಳೆದು ಬಂದ ನಮ್ಮ ತಲೆಮಾರಿನಲ್ಲಿ ಅಧ್ಯಕ್ಷ ಆಯ್ಕೆಯ ಬಗೆಗೂ ಆಂದೋಲನವೇ ನಡೆಯಬೇಕೇನೊ?ಆಸ್ತಿ ಮತ್ತು ಅಧಿಕಾರ ತಮ್ಮ ಹಕ್ಕು ಎಂಬುದನ್ನು ಮೈಗೂಡಿಸಿಕೊಳ್ಳದ ಈ ತಲೆಮಾರಿನ ಸ್ತ್ರೀ ಯರಿಂದ ಅದನ್ನು ನಿರೀಕ್ಷಿಸುವುದೂ ಅತಿ ಮಹತ್ವಾಕಾಂಕ್ಷೆಯೆನಿಸುತ್ತದೆ.   ಆದರೆ ಖಂಡಿತವಾಗಿಯೂ ಕೆಲವು ಪುರುಷರಾದರೂ ಈ  ಆಂದೋಲನಕ್ಕೆ ಜೊತೆಯಾಗುವರೆಂಬ ನಿರೀಕ್ಷೆಯೂ ಬೆಳಕಿನ ಕೋಲಿನಂತೆ ಮಿಂಚುತ್ತದೆ.       ಇಂದಿನ ಯುವ ತಲೆಮಾರು ನಿಜಕ್ಕೂ ಲಿಂಗಸೂಕ್ಷ್ಮತೆಯನ್ನು ಹೊಂದಿದೆಯೆಂದು ಪದೇ ಪದೇ ಸಾಬೀತುಗೊಳ್ಳುತ್ತಿದೆ. ತಮ್ಮ ಸಹ ಬರಹಗಾರರನ್ನು ಹೆಣ್ಣು ಗಂಡುಗಳೆಂಬ ಬೇಧವಿಲ್ಲದೇ ಪರಿಗಣಿಸುವ ಮತ್ತು ಅಧಿಕಾರದಿಂದ ಹಿಡಿದು ಎಲ್ಲವನ್ನೂ ಸಮಾನವಾಗಿ ಪ್ರೀತಿಯಿಂದ ಹಂಚಿಕೊಳ್ಳುವ ವಿಶಾಲ ಮನೋಭಾವವನ್ನು ಇಂದಿನ ಯುವ ಸಾಹಿತಿಗಳು ಹೊಂದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಹೀಗೆಯೇ ಮುಂದುವರೆದಲ್ಲಿ ಕೆಲವೇ ವರ್ಷಗಳಲ್ಲಿ ಸಾಹಿತ್ಯದ ಎಲ್ಲ ಶಕ್ತಿ ಕೇಂದ್ರಗಳಲ್ಲಿ ಲಿಂಗತ್ವದ ಗೆರೆ ಅಳಿಸಿ ಹೋಗಲಿದೆ. ಅದು ಸಂಭವಿಸುವ ಮೊದಲೇ ನಮ್ಮ ತಲೆಮಾರು ಎಚ್ಚೆತ್ತುಕೊಂಡರೆ ಮುಂದಿನ ಪೀಳಿಗೆಗೆ ನಾವು ಮಾರ್ಗದರ್ಶಕರೆನಿಸಿಕೊಳ್ಳುತ್ತೇವೆ. ಏನೇ ಬರೆದರೂ ಅಧಿಕಾರವೆಂಬುವುದು ಅಮಲಾಗಿರುವಾಗ ಅಮಲಿನಲ್ಲಿರುವವರನ್ನು ಎಚ್ಚರಿಸುವುದು ಕಠಿಣ ಕೆಲಸವೆ.          ಮಹಿಳಾ ಶಕ್ತಿಯೆಂಬುದು ಇಂದು ಕಟ್ಟೆಯೊಡೆದ ಪ್ರವಾಹ. ಎಂತಹ ತಡೆಯೇ ಬಂದರೂ ಅದರ ಮುನ್ನುಗ್ಗುವಿಕೆಯನ್ನು ಪ್ರತಿಬಂಧಿಸಲಾಗದು. ಅಧಿಕಾರದ ಚುಕ್ಕಾಣಿ ಹಿಡಿಯಲು ನೀವು ಹೋರಾಡುತ್ತಲೇ ಇರಿ. ನಾವು ಸಾಹಿತ್ಯದ ಹಸಿರುಕ್ಕಿಸುತ್ತಲೇ ಸಾಗುತ್ತೇವೆ. ನಮ್ಮ ತೆಕ್ಕೆಯಲ್ಲಿ ಮುಂದಿನ ಜನಾಂಗವನ್ನು ಕಾಪಿಟ್ಟುಕೊಳ್ಳುತ್ತಲೇ ಅರಿವಿನ ಹಣತೆಯನ್ನು ಬೆಳಗುತ್ತೇವೆ. ಕೈಯಲ್ಲಿ ಬೀಜ ಹಿಡಿದವರಷ್ಟೇ ಕಾಡಿನ ಕನಸು ಕಾಣಬಲ್ಲರು. ಇಂದು ನೀವು ಕೇಳಿದ ಪ್ರಶ್ನೆ ಸ್ವಲ್ಪವೇ ವರ್ಷಗಳಲ್ಲಿ ಉತ್ತರ ಪಡೆದುಕೊಂಡೀತು. ಚುನಾವಣೆಯ ಮೂಲಕವೇ ಅಧ್ಯಕ್ಷ ಸ್ಥಾನ ಮಹಿಳೆಯರಿಗೊಲಿಯಲಿ. *****************************************                                                                     ***********************                                                                     –

ಕಸಾಪಗೆ ಮಹಿಳಾ ಅಧ್ಯಕ್ಷರು Read Post »

You cannot copy content of this page

Scroll to Top