ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಶಿಕ್ಷಣ

ಗುರುವಿನ ಗರಿಮೆ

ಲೇಖನ ಗುರುವಿನ ಗರಿಮೆ ನೂತನ ದೋಶೆಟ್ಟಿ ಬಾಲ್ಯದಲ್ಲಿ ಶಿಕ್ಷಣವೆಂದರೆ ಶಿಕ್ಷೆ  ಯೌವನದಲ್ಲಿ ಶಿಕ್ಷಣವೆಂದರೆ ಪರೀಕ್ಷೆಗಳು ಹಾಗೂ ಮೋಜು, ಆನಂತರದಲ್ಲಿ ಅದೇ ಶಿಕ್ಷಣ ವೃತ್ತಿಗೆ ರಹದಾರಿ.ಈ ರೀತಿಯಾಗಿ ಶಿಕ್ಷಣವನ್ನು ಸರಳೀಕರಿಸಬಹುದಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹಿನ್ನೆಲೆಯಲ್ಲಿ ಎರಡು ಸರಳ ಸೂತ್ರಗಳನ್ನು ನಿಮ್ಮ ಮುಂದೆ ಇಡಬಯಸುತ್ತೇನೆ.  ಶಿಕ್ಷಣ= ಶಿಕ್ಷಣ ಸಂಸ್ಥೆ+ ವಿದ್ಯಾರ್ಥಿ ಉದ್ಯೋಗ= ಮಾರ್ಕ್ಸ+ ವಶೀಲಿ ಈ ಎರಡು ಸೂತ್ರಗಳನ್ನು ಇಟ್ಟುಕೊಂಡು ಇಂದಿನ ಶಿಕ್ಷಣದ ಬಗ್ಗೆ ನೋಡೋಣ. ಮೊದಲ ಸೂತ್ರದಲ್ಲಿ ಶಿಕ್ಷಣ ಸಂಸ್ಥೆಗಳು ಬಹು ಮುಖ್ಯವಾಗುತ್ತವೆ. ಉನ್ನತ ಶಿಕ್ಷಣದಲ್ಲಿ ಈ ಸಂಸ್ಥೆಗಳು ನೀಡುವ ಶಿಕ್ಷಣದ ಗುಣಮಟ್ಟ ಮುಖ್ಯವಾದರೂ ಆ ಸಂಸ್ಥೆಗಳ ಮೂಲಕ ದೊರೆಯಬಹುದಾದ ಉದ್ಯೋಗಾವಕಾಶ ಹಾಗೂ ಸಂಬಳದ ಪ್ಯಾಕೇಜ್ ಬಹಳ ಮುಖ್ಯವಾಗುತ್ತದೆ.ಈ ಕಾರಣದಿಂದಲೇ ತಾಂತ್ರಿಕ ಹಾಗೂ ವೈದ್ಯಕೀಯ ಉನ್ನತ ಶಿಕ್ಷಣ ವಿದ್ಯಾಲಯಗಳು ಪರಸ್ಪರ ಪೈಪೋಟಿಗೆ ಬಿದ್ದಂತೆ ವಿದ್ಯಾರ್ಥಿಗಳನ್ನು ತಮ್ಮತ್ತ ಸೆಳೆದುಕೊಳ್ಳಲು ಹೊಸ ಹೊಸ ಆಮಿಷಗಳನ್ನು ಒಡ್ಡುತ್ತಿರುವುದು.ಪ್ರತಿವರ್ಷ ಸಮರೋಪಾದಿಯಲ್ಲಿ ವಿದ್ಯಾಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧವಾಗುತ್ತಿರುವುದು.ಈ ಸೂತ್ರದಲ್ಲಿ ಗುರು ಇಲ್ಲದಿರುವುದುದನ್ನು ಗಮನಿಸಬೇಕು. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಗುರುವಿನ ಸ್ಥಾನ ಮಹತ್ವವನ್ನು ಕಳೆದು ಕೊಳ್ಳುತ್ತಿರುವುದನ್ನು ಈ ಸಂಸ್ಥೆಗಳು ನಡೆಸುವ ಪರೀಕ್ಷೆಗಳು, ಗುರುಗಳ ಬದಲಾಗಿ ಕೋಚಿಂಗ್ ಸೆಂಟರುಗಳ ಗುರುವಲ್ಲದ ತರಬೇತುದಾರರ ಮೇಲೆ ಹೆಚ್ಚು ಅವಲಂಬಿತರಾಗುವ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಮತ್ತೆ ಮತ್ತೆ ಪುಷ್ಟೀಕರಿಸುತ್ತಿದ್ದಾರೆ. ಎರಡನೇ ಸೂತ್ರ ವಿದ್ಯಾಭ್ಯಾಸದ ಗುರಿಯನ್ನು ನಿರ್ಧರಿಸುತ್ತದೆ.ಅದೆಂದರೆ ಉದ್ಯೋಗ.ಕೋರ್ಸಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಅದರಿಂದ ದೊರೆಯಬಹುದಾದ ಸಂಬಳದ ಪ್ಯಾಕೇಜಿನ ಮೇಲೆ ಅದು ನಿರ್ಧರಿಸಲ್ಪಡುತ್ತದೆ.ಇದಕ್ಕೆ ಮುಖ್ಯವಾಗಿ ಬೇಕಾಗಿರುವುದು ವಿದ್ಯಾರ್ಥಿ ಪಡೆಯುವ ಅಂಕಗಳು, ಅಗತ್ಯ ಸಂದರ್ಭದಲ್ಲಿ ಮಾಡಬಹುದಾದ ವಶೀಲಿ.ಇಲ್ಲಿಯೂ ಕೂಡ ಗುರುವಿನ ಮಾತೇ ಇಲ್ಲ. ಇಂತಹ ಅನೇಕ ಸೂತ್ರಗಳನ್ನು ಸಿದ್ಧಪಡಿಸುತ್ತ ಹೋಗಬಹುದು.ಪ್ರಯತ್ನಿಸಿ ನೋಡಿ.ಆದರೆ ಎಲ್ಲಿಯೂ ಗುರುವಿನ ಅಗತ್ಯತೆ ಕಂಡುಬರದಿರುವುದು ಇಂದಿನ ಶಿಕ್ಷಣ ವ್ಯವಸ್ಥೆಯ ವಾಸ್ತವ.ಆಚಾರ್ಯದೇವೋ ಭವ ಎಂದು ಗುರುವನ್ನು ದೈವತ್ವಕ್ಕೇರಿಸಿದ  ನಮ್ಮ ನಾಡಿನಲ್ಲಿ ಹೀಗೆ ಗುರುವಿನ ಸ್ಥಾನ ಗೌಣವಾಗಲು ಆರಂಭವಾದದ್ದು ತೀರ ಇತ್ತೀಚಿನ ವರ್ಷಗಳಲ್ಲಿ. ನಮ್ಮ ದೇಶದಲ್ಲಿ ಗುರುಕುಲ ಪದ್ಧತಿಯಲ್ಲಿ ಮಾತ್ರಇದ್ದ ಶಿಕ್ಷಣ ನಿಲುಕುತ್ತಿದ್ದುದು ಕೂಡ ಸಮಾಜದ ಉನ್ನತ ವರ್ಗಕ್ಕೆ ಸೇರಿದ ಕೆಲ ಗಣ್ಯಾತಿಗಣ್ಯರಿಗೆ ಮಾತ್ರ. ಕಾಲಾಂತರದಲ್ಲಿ ಆದ ಸಾಮಾಜಿಕ ಬದಲಾವಣೆಗಳಿಂದ, ಶೈಕ್ಷಣಿಕ ಕ್ರಾಂತಿಯಿಂದ.  ಶಿಕ್ಷಣ ಸಾರ್ವತ್ರಿಕವಾದದ್ದು ಆಧುನಿಕ ಭಾರತದ ಅತಿ ದೊಡ್ಡ ಸಾಧನೆ. ಆದರೆ ಸ್ವಾತಂತ್ರ್ಯಾನಂತರ ಆದ ಆರ್ಥಿಕ ಬದಲಾವಣೆಯ ಬಿರುಗಾಳಿಯಲ್ಲಿ ಶಿಕ್ಷಣ ಕ್ಷೇತ್ರವೂ ಸಿಲುಕಿ ಅದರ ವ್ಯಾಪಾರೀಕರಣವಾದದ್ದರಿಂದಲೇ ‘ಗುರು’ಸ್ಥಾನ ಈ ಹಿಂದಿನ ಮಹತ್ವವನ್ನು ಕಳೆದುಕೊಳ್ಳಲಾರಂಭಿಸಿತು.‘ ಹಿಂದೆ ಗುರುವಿದ್ದ; ಮುಂದೆ ಗುರಿ ಇತ್ತು. ಸಾಗುತಿತ್ತು ಧೀರರದಂಡು. ಇಂದು ಹಿಂದೆ  ಗುರುವಿಲ್ಲ; ಮುಂದೆ ಗುರಿ ಇಲ್ಲ. ಸಾಗುತಿಹುದು ರಣಹೇಡಿಗಳ ಹಿಂಡು’ ಎಂಬ ನುಡಿ ಶಿಕ್ಷಣ ಕ್ಷೇತ್ರಕ್ಕೆ ಬಿದ್ದ ಕೊಡಲಿಪೆಟ್ಟಿನಿಂದ ಘಾಸಿಗೊಂಡು ಆಡಿದ್ದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಈ ರಣಹೇಡಿತನವನ್ನೂ ಮೀರಿಸಿದ ಶಿಕ್ಷಣ ವ್ಯವಸ್ಥೆಗೆ ನಮ್ಮ ದೇಶ ಸಾಕ್ಷಿಯಾಗುತ್ತಿದೆ. ಉನ್ನತ ಶಿಕ್ಷಣದ ದೇಗುಲಗಳಾಗಿದ್ದ ವಿಶ್ವವಿದ್ಯಾಲಯಗಳೂ ಅನೀತಿಯ ತಾಣಗಳಾಗುತ್ತಿವೆ. ಶಿಕ್ಷಕರಿಂದಲೇ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚು ಹೆಚ್ಚು ದಾಖಲಾಗುತ್ತಿವೆ. ಈ ಪಿಡುಗು ಶಾಲೆ ಕಾಲೇಜುಗಳನ್ನೂ ಬಿಟ್ಟಿಲ್ಲ. ಇಂತಹ ವಾತಾವರಣದಲ್ಲಿ ನಲುಗುತ್ತಿರುವುದು ವಿದ್ಯೆಯೇ ಹೊರತು ಶಿಕ್ಷಕರಾಗಲೀ, ವಿದ್ಯಾರ್ಥಿಗಳಾಗಲೀ ಅಲ್ಲ. ಶಿಕ್ಷಕರಿಗೆ ಸಂಬಳ, ಭತ್ಯೆಗಳು, ಪರೀಕ್ಷಾ ಡ್ಯೂಟಿಗಳು, ಜೊತೆಗೆ ಒಂದಷ್ಟು ತರಗತಿಗಳಲ್ಲಿ ಪಾಠ ಇವಿಷ್ಟು ಶಿಕ್ಷಣ ವ್ಯವಸ್ಥೆಯಾಗಿ ಕಂಡರೆ ವಿದ್ಯಾಥಿಗಳಿಗೆ ಹಾಜರಿ ಹಾಗೂ ಪರೀಕ್ಷೆಗಳೇ ಶಿಕ್ಷಣ ವ್ಯವಸ್ಥೆಯಾಗಿವೆ. ಇದರಿಂದ ಸರಿಯಾದ ಶಿಕ್ಷಣ ಯಾವ ಹಂತದಲ್ಲೂ ದೊರೆಯದೇ ಇಡಿಯ ಶಿಕ್ಷಣ ವ್ಯವಸ್ಥೆ ಬಡವಾಗುತ್ತಿದೆ. ಅವ್ಯವಹಾರ, ಅನೈತಿಕತೆ ಈ ಶಿಕ್ಷಣ ವ್ಯವಸ್ಥೆಯಲ್ಲಿ ಅಟ್ಟಹಾಸವನ್ನು ಮೆರೆಯುತ್ತಿದೆ ಎಂದರೆ ತಪ್ಪಾಗಲಾರದು. ಪರೀಕ್ಷಾ ಗೊಂದಲಗಳು, ಪ್ರತಿವರ್ಷ ಕಾಡುವ ಪ್ರಶ್ನೆ ಪತ್ರಿಕೆ ಗೊಂದಲಗಳು, ಪರೀಕ್ಷೆಗೆ ಮುನ್ನವೇ ಅವುಗಳು ಬಯಲಾಗುವುದು, ಪರೀಕ್ಷಾ ನಂತರವೂ ಫಲಿತಾಂಶಗಳಲ್ಲಿ ಗೊಂದಲ, ಅವ್ಯವಹಾರಗಳು ಈ ವ್ಯವಸ್ಥೆಯನ್ನುಗುರುವಿನ ಹೊರತಾಗಿ ಬೇರೆ ಶಕ್ತಿಗಳು, ಪಟ್ಟಭದ್ರ ಹಿತಾಸಕ್ತಿಗಳು ಆಳುತ್ತಿರುವುದನ್ನು ಕಣ್ಣಿಗೆ ರಾಚುವಂತೆ ತೋರಿಸುತ್ತಿವೆ. ಈ ಹಿನ್ನೆಲೆಯಲ್ಲಿ ‘ಗುರು’ ಎಂಬ ಪದ ತನ್ನ ಗರಿಮೆಯನ್ನು ಕಳೆದುಕೊಂಡಿದೆ. ಕೇವಲ ಮೂರು ದಶಕಗಳ ಹಿಂದೆ ಗುರು-ಶಿಷ್ಯ ಸಂಬಂಧ ಭಯ-ಭಕ್ತಿಯ ಸಂಬಂಧವಾಗಿತ್ತು. ತಮ್ಮನ್ನು ಗೌರವಿಸುವ ಅಪಾರ ಶಿಷ್ಯವೃಂದ ಗುರುಗಳಿಗೆ ಇತ್ತು.ಇದು ಒಳ್ಳೆಯ ಶಿಕ್ಷಣ ವ್ಯವಸ್ಥೆಯ ಸೊಬಗು ಕೂಡ.ಗೌರವಕ್ಕೆ ಪಾತ್ರನಾಗುವ ಗುರು ಎಂದರೆ ಅವನು ತನ್ನ ಕರ್ತವ್ಯಗಳಿಗೆ ಚ್ಯುತಿ ಬಾರದಂತೆ ತನ್ನ ಶಿಷ್ಯವೃಂದಕ್ಕೆ ಸಲ್ಲಬೇಕಾದ ಸೇವೆಯನ್ನು ಸಲ್ಲಿಸಿದ್ದಾನೆ ಹಾಗೂ ಹೊಣೆಯನ್ನು ನಿಭಾಯಿಸಿದ್ದಾನೆ ಎಂದೇ ಅರ್ಥ. ಅದರಂತೆ ವಿದ್ಯಾರ್ಥಿಗಳೂ ಕೂಡ ಅಂತಹ ಗುರುವಿಗೆ ವಿಧೇಯರಾಗಿರುತ್ತಾರೆಂದರೆ ಅದು ಆ ಗುರುವೇ ಅವರಿಗೆ ನೀಡಿದ ಮಾರ್ಗದರ್ಶನದ ಮೂಲಕ ಎಂಬುದೂ ಕೂಡ ಸತ್ಯ. ಕಾಲ ಕಳೆದಂತೆ ಗುರು-ಶಿಷ್ಯ ಸಂಬಂಧದಲ್ಲಿ ಬದಲಾವಣೆ ಕಂಡು ಬರುತ್ತಪರಸ್ಪರ ಮಿತ್ರತ್ವದ ನೆಲೆಗೆ ಈ ಸಂಬಂಧವನ್ನು ತಂದು ನಿಲ್ಲಿಸಿತು.ಇದು ಕೂಡ ಬಹು ಸುಂದರವಾದ ಘಟ್ಟವೇ. ಏಕೆಂದರೆ ಆಜ್ಞಾಪಾಲಕ ವಿದ್ಯಾರ್ಥಿ ಸಂಸ್ಕೃತಿಯಿಂದ ಗೆಳೆತನಕ್ಕೆ ಒಗ್ಗಿಕೊಳ್ಳುವ ಸಖ್ಯ ಪರಂಪರೆ ಈ ಕಾಲದಲ್ಲೆ ಬೆಳೆಯಿತು.ಇತ್ತೀಚಿನ ದಿನಗಳಲ್ಲಿ ಇದೂ ಕೂಡ ಮಾಯವಾಗುತ್ತ ಎಲ್ಲವೂ ಕೇವಲ ವ್ಯಾವಹಾರಿಕ ನೆಲೆಗೆ ಬಂದು ನಿಂತಿರುವುದು ಶಿಕ್ಷಣ ವ್ಯವಸ್ಥೆಯ ಅರಾಜಕತೆಯನ್ನು ತೋರಿಸುತ್ತದೆ.ಇದಕ್ಕೆಲ್ಲ ಮುಖ್ಯ ಕಾರಣ ಈ ವ್ಯವಸ್ಥೆಯಲ್ಲಿ ಬದಲಾದ ಗುರುವಿನ ಸ್ಥಾನ ಮಾನ ಎಂದು ನನ್ನ ಅನಿಸಿಕೆ. ವಿದ್ಯಾರ್ಥಿಗಳಲ್ಲಿ ಆಶಿಸ್ತು ಹೆಚ್ಚುತ್ತಿದೆ. ವಿದ್ಯಾಲಯಗಳು ಅನೀತಿಯ ತಾಣಗಳಾಗುತ್ತಿವೆ ಎಂಬ ಹಳಹಳಿಕೆ ಕೇವಲ ಕ್ಲೀಷೆಯಾಗುತ್ತದೆ. ಈ ಸ್ಥಿತಿಗೆ ಶಿಕ್ಷಣ ಕ್ಷೇತ್ರವನ್ನು ವಿಧಿವತ್ತಾಗಿ ನೂಕಲು ಆರಂಭಿಸಿದ್ದು ಕೆಲ ದಶಕಗಳ ಹಿಂದಿನಿಂದಲೇ ಎಂಬುದು ನಮಗೆ ಅರಿವಿದ್ದರೂ ಅದನ್ನು ಪರಿಣಾಮಕಾರಿಯಾಗಿ ಬದಲಾಯಿಸುವ ಗೊಡವೆ ಆಡಳಿತವೂ ಸೇರಿದಂತೆಯಾರಿಗೂ ಬೇಡವಾದದ್ದು ಈ ದುರಂತಕ್ಕೆ ಕಾರಣ.ಈಗ ಹಿಂದಿರುಗಿ ಹೋಗಲಾರದಷ್ಟು ದೂರದ ದಾರಿಯಲ್ಲಿ ನಮ್ಮ ಶಿಕ್ಷಣ ವ್ಯವಸ್ಥೆ ಕ್ರಮಿಸಿಯಾಗಿದೆ.ಆದ್ದರಿಂದ ಆರಂಭದಲ್ಲಿ ಹೇಳಿದ ಸೂತ್ರಗಳಿಗೆ ಪರ್ಯಾಯವಾಗಿ ಸೂತ್ರಗಳನ್ನು ನಾವು ಸಿದ್ಧಪಡಿಸಬೇಕು.ಅವು ಜ್ಞಾನ ಹಾಗೂ ಗುರುವನ್ನು ಒಳಗೊಂಡಂತೆ ಇರಬೇಕು.ಶಿಕ್ಷಣದ ಮೂಲ ಉದ್ದೇಶ ಜ್ಞಾನವೇ ಹೊರತು ಉದ್ಯೋಗವಲ್ಲ. ಆ ಜ್ಞಾನ ಗುರುಮುಖೇನ ಬರುವಂತಾಗಬೇಕು. ಮಾತ್ರವಲ್ಲದೇ ಗುರುವೂ ಕೂಡ ತನ್ನ ಸ್ಥಾನ ಹಾಗೂ ಹೊಣೆಗೆ ಬದ್ಧತೆಯನ್ನು ಹೊಂದುವಂತಿರಬೇಕು.ಈ ಮಾತನ್ನು ಕ್ಲಾಸ್‌ರೂಂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹೇಳಬಹುದು.ಆದರೆಇಂದು ಶಿಕ್ಷಣ ಈ ಕ್ಲಾಸರೂಂ ಗೊಡವೆಯನ್ನು ದಾಟಿ ಅಂತರ್ಜಾಲದ  ಮೂಲಕ ಯಥೇಚ್ಛವಾಗಿ ದೊರೆಯುತ್ತಿದೆ. ಇಲ್ಲಿ ಗುರು-ಶಿಷ್ಯ ಪರಂಪರೆಗಿಂತ ನೀಡಲ್ಪಡುವ ಸಮಯ ಹಾಗೂ ಜ್ಞಾನಾಧಾರಿತ ವ್ಯಾವಹಾರಿಕ ಹಾಗೂ ಕೇವಲ ಲಾಭಾಧಾರಿತ ಶಿಕ್ಷಣಕ್ಕೆ ಮಾತ್ರ ಒತ್ತು ನೀಡಲಾಗಿದೆ.ಒಟ್ಟಿನಲ್ಲಿ ಶಿಕ್ಷಣ ಎಂದರೆ ಒಳ್ಳೆಯ ಸಂಬಳ ತರುವ ಉದ್ಯೋಗಕ್ಕೆ ರಹದಾರಿ ಎಂಬ ಸಿದ್ಧಸೂತ್ರ ಇಂದು ಪ್ರಚಲಿತದಲ್ಲಿರುವುದು ದಿಟ. ಮೊಗೆದಷ್ಟೂದೊರೆಯುವ ಮಾಹಿತಿಯ ಮಹಾಪೂರದ ಇಂದಿನ ದಿನಗಳಲ್ಲಿ ಒನ್‌ಟುಒನ್‌ ಟೀಚಿಂಗ್ ಬಹುತೇಕವಾಗಿ ನಶಿಸುತ್ತಿದೆ.ಆದರೆ ಶಿಕ್ಷಣ ಕ್ಷೇತ್ರದಲ್ಲಿ ತೆರೆದುಕೊಳ್ಳುತ್ತಿರುವ ಹೊಸ ಹೊಸ ದಾರಿಗಳು, ಅವಕಾಶಗಳು, ಇಂದಿನ ವಿದ್ಯಾರ್ಥಿಗಳ ಅಪ್ರತಿಮ ಸಾಮರ್ಥ್ಯ ಮೊದಲಾದವುಗಳನ್ನು ಖಂಡಿತ ಕಡೆಗಣಿಸುವಂತಿಲ್ಲ. ಶಿಕ್ಷಣಕ್ಕೆ ಇಂದು ಅಂತಾರಾಷ್ಟೀಯ ಆಯಾಮ ದೊರೆತಿದೆ.ಎಲ್ಲ ಸಂದರ್ಭಗಳಲ್ಲೂ ಬಂಡವಾಳಶಾಹಿ, ವಸಾಹತುಶಾಹಿ ದಾಳಿಯನ್ನು ತೀವ್ರವಾಗಿ   ಖಂಡಿಸುವ ನಾವು ಈ ಹೊಸ ಶಿಕ್ಷಣ ಆಯಾಮಕ್ಕೆ ಮಾತ್ರ ಬಂಡವಾಳಶಾಹಿಯೇ ಕಾರಣ ಎಂಬುದನ್ನೂ ಮರೆಯಬಾರದು. ಉತ್ತಮ ದರ್ಜೆಯ ಹಾಗೂ ವಿದೇಶದಲ್ಲಿ ಶಿಕ್ಷಣ ಉಳ್ಳವರಿಗೆ ಮಾತ್ರ ನಿಲುಕುತ್ತಿದ್ದ ಕಾಲ ಈಗ ಇಲ್ಲವಾಗಿದೆ.ಪ್ರತಿಭೆಗೆ ಸಲ್ಲಬೇಕಾದ ಪುರಸ್ಕಾರ ಸಲ್ಲುವ ಅವಕಾಶಗಳನ್ನೂ ಈ ಬಂಡವಾಳಶಾಹಿಯೇ ತೆರೆದಿದೆ.ಇದು ಸಧ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕಾಣ ಸಿಗುವ ಧನಾತ್ಮಕಗುಣ.ಅಂದ ಮಾತ್ರಕ್ಕೆ ವಿದೇಶೀ ಶಿಕ್ಷಣವೇ ಉನ್ನತ ಗುಣಮಟ್ಟದ್ದು ಎಂದಂತೂ ಅಲ್ಲ. ಭಾರತದಲ್ಲೂ ಇಂದು ಉತ್ಕೃಷ್ಟ ಮಟ್ಟದ ಶಿಕ್ಷಣ ನೀಡುವ ಅನೇಕ ಸಂಸ್ಥೆಗಳಿವೆ. ಮಾತು ಬಂದು ನಿಲ್ಲುತ್ತಿರುವುದು ಶಿಕ್ಷಣ ಸಂಸ್ಥೆಗಳಿಗೇ.ಗುರು ಮುಖ್ಯವಲ್ಲದ ಬದಲಾದ ಶಿಕ್ಷಣ ಸ್ವರೂಪದ ವಾಸ್ತವತೆಯನ್ನು ಒಪ್ಪಿಕೊಳ್ಳುವುದು ಇಂದಿನ ಶಿಕ್ಷಣ ವ್ಯವಸ್ಥೆಯ ಅಗತ್ಯ ಹಾಗೂ ಅನಿವಾರ್ಯ ಕೂಡ. ***********************************

ಗುರುವಿನ ಗರಿಮೆ Read Post »

ಇತರೆ, ಪ್ರಬಂಧ

ಶಿಶುತನದ ಹದನದೊಳು ಬದುಕಲೆಳಸಿ…

ಪ್ರಬಂಧ ಶಿಶುತನದ ಹದನದೊಳು ಬದುಕಲೆಳಸಿ… ಲಕ್ಷ್ಮಿ ನಾರಾಯಣಭಟ್ ಈ ಸುಂದರ ಮುಂಜಾನೆ ನನಗೆ ತುಂಬಾ ಪ್ರಿಯವಾದ ಹಾಡೊಂದರ ಸಾಲುಗಳು ನನ್ನ ಮನ:ಪಟಲದಲ್ಲಿ ಭಾವ ತರಂಗಗಳನ್ನು ಎಬ್ಬಿಸುತ್ತಿವೆ. ನಾನು ಹಾಡುಗಾರನಲ್ಲದಿದ್ದರೂ, ಈ ಸಾಲುಗಳಿಗೆ ದಯವಿಟ್ಟು ಕಿವಿಗೊಡಿ. ನೆನಪಿದೆಯೇ ನಿನಗೆ? ನಾವಿಬ್ಬರೂ ಅಂದು ಹೊಳೆಯ ದಡದಲ್ಲಿ ನಿಂದು ಮರಳು ಮನೆಗಳ ಕಟ್ಟಿ ಆಟವಾಡಿದ್ದು ನಿನಗೆ ನೆನಪಿದೆಯೇ ನಿನಗೆ? ಬಾ ಗೆಳೆಯ ಬಾರಯ್ಯಾ, ಆಟವಾಡೋಣ ಬಾಲ್ಯದ ನೆನಪನು ಮರಳಿ ಕಟ್ಟೋಣ. ನೆನಪಿದೆಯೇ ನಿನಗೆ? ನನಗೆ ಬೇಜಾರಾದಾಗಲೆಲ್ಲಾ ಈ ಸಾಲುಗಳನ್ನು ಗುಣುಗುಣಿಸುತ್ತೇನೆ. ಆಗ ಬಾಲ್ಯದ ದಿನಗಳು ಮತ್ತೆ ಜೀವ ತಳೆಯುತ್ತವೆ. ಕನಸುಗಳು ಗರಿಬಿಚ್ಚಿ ಕುಣಿಯತೊಡಗುತ್ತವೆ. ನೆನಪಿನ ದೋಣಿಯಲ್ಲಿ ತೇಲುತ್ತಾ, ಕಾಲಾತೀತ ಭಾವಪ್ರಪಂಚಕ್ಕೆ ಮನಸ್ಸು ತೆರೆದುಕೊಳ್ಳುತ್ತದೆ. ಆದರೆ ಯಾವುದೇ ದಿನಪತ್ರಿಕೆಯ ಮುಖಪುಟದ ಸುದ್ದಿ, ಅಂತೆಯೇ ಟಿವಿ ಚ್ಯಾನೆಲ್-ಗಳ ಆರ್ಭಟ ಓದಿದೊಡನೆ/ನೋಡಿದೊಡನೆ ಕನಸಿನ ಈ ಸುಂದರ ಲೋಕ ನುಚ್ಚುನೂರಾಗಿ ಹೋಗುತ್ತದೆ. ದುರಂತಗಳ ಸರಮಾಲೆ –- ರಾಜಕೀಯ ದೊಂಬರಾಟ, ರೇಪ್, ಕೊಲೆ, ಸುಲಿಗೆ, ವಂಚನೆ, ಭಯೋತ್ಪಾದನೆ, ಅಪಘಾತ, ಈಗಂತೂ ಕೊರೊನಾ ಕೊರೊನಾ ಸಹಸ್ರನಾಮ ಕಣ್ಣಿಗೆ ಹೊಡೆಯುವಂತೆ ರಾರಾಜಿಸುತ್ತಿರುತ್ತದೆ. ಕೇವಲ ಯೋಚಿಸಿದರೂ ಭಯ, ಜಿಗುಪ್ಸೆ ಹುಟ್ಟಿಸುವ ಮಾನವನ ಅತೀ ಆಸೆ, ತೀರದ ದಾಹ -– ಹಣ, ಅಧಿಕಾರ, ಭೋಗಲಾಲಸೆಗಳೇ ನಮ್ಮನ್ನು ಈ ದುಃಸ್ಥಿತಿಗೆ ದೂಡಿವೆ. ಇದಕ್ಕೆ ಕಾರಣ, ಪರಿಹಾರ ಏನೆಂದು ಯೋಚಿಸಬೇಡವೇ? ಜೀವ ಪ್ರಪಂಚದಲ್ಲಿ ಮನುಷ್ಯ ಮಾತ್ರ ಕನಸು ಕಾಣಬಲ್ಲ, ನಗಬಲ್ಲ ಅದ್ಭುತ ಸಾಮರ್ಥ್ಯ ಪಡೆದಿದ್ದಾನೆ. ಇತರ ಯಾವ ಪ್ರಾಣಿಯೂ – ಪ್ರಾಣ ಇರುವುದೆಲ್ಲವೂ ‘ಪ್ರಾಣಿ’ಯೇ – ನಗುವುದೂ ಇಲ್ಲ, ಕನಸು ಕಾಣುವುದೂ ಇಲ್ಲ. ಹುಲಿ, ಸಿಂಹಗಳಂತಹ ಕೂರ ಪ್ರಾಣಿಗಳೂ ಕೂಡಾ ಭಾವನೆಗಳಿಗೆ, ನಾವು ತೋರುವ ಪ್ರೀತಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತವೆ. ಇದಕ್ಕೆ ಏಕೈಕ ಅಪವಾದವೆಂದರೆ ಮನುಷ್ಯ ಪ್ರಾಣಿ ಮಾತ್ರ! ಪ್ರೀತಿಗೆ ದ್ರೋಹ; ನಂಬಿಕೆ, ವಿಶ್ವಾಸಕ್ಕೆ ಪ್ರತಿಯಾಗಿ ಮೋಸ, ದಗಲ್ಬಾಜಿ ಎಲ್ಲವನ್ನೂ – ತನ್ನವರನ್ನೂ ಸೇರಿಸಿ – ಭಾವನಾರಹಿತವಾಗಿ, ಅಷ್ಟೇ ಚಾಣಾಕ್ಷತನದಿಂದ ಮನುಷ್ಯ ಮಾಡಬಲ್ಲ. ಇಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಾದದ್ದು ಏನು ಎಂದರೆ ಯಾವಾಗ ಮನುಷ್ಯ ಕನಸು ಕಾಣುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾನೋ ಆವಾಗಲೆಲ್ಲಾ ಭಾವನೆಗಳಿಗೆ ಎರವಾಗುತ್ತಾನೆ. ಎಲ್ಲಿಲ್ಲದ ದುರಂಹಕಾರ ಆತನ ರಾಕ್ಷಸೀ ಪ್ರವೃತ್ತಿಯನ್ನು ಬಡಿದೆಬ್ಬಿಸಿ, ವಿನಾಶದಂಚಿಗೆ ಆತನನ್ನು ತಳ್ಳುತ್ತದೆ. ಸುನಾಮಿ, ಭೂಕಂಪಗಳಂತಹ ಪ್ರಕೃತಿ ವಿಕೋಪಗಳು, ಹಾಗೆಯೇ ನಮ್ಮನ್ನೆಲ್ಲಾ ಕಾಡುತ್ತಿರುವ ಕೊರೊನಾ ವೈರಸ್-ನಂತಹ ಮಹಾವ್ಯಾಧಿಜನಕ ಹೆಮ್ಮಾರಿಗಳು ಉಂಟುಮಾಡುವ ವಿನಾಶಕ್ಕಿಂತಲೂ ಹೆಚ್ಚು ದುರಂತವನ್ನು ಕೆಟ್ಟ ಮನಸ್ಸಿನ ಕೇವಲ ಒಬ್ಬನೇ ಒಬ್ಬ ಮನುಷ್ಯ ಮಾಡಬಲ್ಲ! ಇದರಿಂದ ಬಿಡುಗಡೆ ಬೇಕಾದರೆ, ಮನುಷ್ಯ ಮತ್ತೆ ತನ್ನ ಬಾಲ್ಯದ ಮುಗ್ಧ, ಸ್ನಿಗ್ಧ ಭಾವಪ್ರಪಂಚಕ್ಕೆ ಹಿಂತಿರುಗಬೇಕು. ಸಹಜ ಮುಗ್ಧತೆ, ನಗು, ನಲಿವು, ಸಂಭ್ರಮಗಳ ಆ ದಿನಗಳನ್ನು ಪುನಃ ಜೀವಂತಗೊಳಿಸಬೇಕು. ಕನಸು ಕಾಣಬೇಕು. ಇದಕ್ಕೆ ಪೂರಕವಾಗಿ ಸಾಹಿತ್ಯ, ಸಂಗೀತ, ನಾಟಕ ಇತ್ಯಾದಿ ಭಾವ ಪ್ರಧಾನ ಮಾಧ್ಯಮಗಳಲ್ಲಿ ಅಭಿರುಚಿ ಬೆಳೆಸಿಕೊಂಡು ಮನಸ್ಸನ್ನು ಉದಾತ್ತ ಭಾವಗಳತ್ತ ಹರಿಯಬಿಡಬೇಕು. ಕನಸು ಕಾಣುವ, ಶಿಶುವಿನೋಪಾದಿಯಲ್ಲಿ ನಿರ್ಮಲವಾಗಿ ನಗುವ ಸಹಜ ಪ್ರವೃತ್ತಿಗೆ ಮತ್ತೆ ಮರಳಬೇಕು. ಪ್ರಸಿದ್ಧ ಆಂಗ್ಲ ದಾರ್ಶನಿಕ ಕವಿ ವಿಲಿಯಂ ಬ್ಲೇಕ್-ನ (೧೭೫೭-೧೮೨೭) ‘Auguries of Innocence’ ಎಂಬ ಕವನದಲ್ಲಿ ಬರುವ ಈ ಸಾಲುಗಳನ್ನು ಗಮನಿಸಿ: It is right it should be so Man was made for Joy & Woe And when this we rightly know Thro the World we safely go ಕಷ್ಟ, ಸುಖಗಳನ್ನು ಅನುಭವಿಸಲೆಂದೇ ದೇವರು ಮನುಷ್ಯನನ್ನು ಸೃಷ್ಟಿಸಿ ಈ ಪ್ರಪಂಚಕ್ಕೆ ತಂದ. ಇದರಲ್ಲಿ ಮನುಷ್ಯನಿಗೆ ಆಯ್ಕೆಯ ಅವಕಾಶವೇ ಇಲ್ಲ. ಎರಡನ್ನೂ ಅನುಭವಿಸಬೇಕು. ಹಾಗಿದ್ದಾಗ ಅದನ್ನು ಸಮಚಿತ್ತದಿಂದ ಸ್ವೀಕರಿಸುವುದೊಂದೇ ದಾರಿ. ಮಗುವಿಗೂ, ಅನುಭಾವಿಗೂ ಇರುವ ಸಾಮ್ಯತೆ ಎಂದರೆ ಈ ಸಮಚಿತ್ತತೆ; ಅನುಭಾವಿ ನಕ್ಕು ಸುಮ್ಮನಾಗುತ್ತಾನೆ, ಮಗು ಅತ್ತು, ನಗುತ್ತದೆ. ಮರುಕ್ಷಣ ನಕ್ಕದ್ದೇಕೆ, ಅತ್ತದ್ದೇಕೆ ಎಂಬುದನ್ನು ಮರೆತುಬಿಡುತ್ತದೆ. ದೊಡ್ಡವರು ನಾವು ಹೀಗಲ್ಲ. ಎಂದೋ ಆಗಿ ಹೋದ ಘಟನೆಗಳನ್ನು ಮತ್ತೆ ಮತ್ತೆ ನೆನಪಿಸಿಕೊಂಡು ನಿತ್ಯ ದುಃಖಿಗಳಾಗುತ್ತೇವೆ. ವಿಸ್ಮಯ ಎಂದರೆ ಇದು ‘ಸುಖದ ಕ್ಷಣಗಳಿಗೆ’ ಅನ್ವಯವಾಗುವುದಿಲ್ಲ. ಎಂದೋ ಅನುಭವಿಸಿದ ಸುಖವನ್ನು ಮತ್ತೆ ಮತ್ತೆ ನೆನಪಿಸಿಕೊಂಡರೆ ಆಗುವುದು ದುಃಖವೇ ಹೊರತು ಸಂತೋಷವಲ್ಲ! ಬ್ಲೇಕ್-ನ ಕವನದ ಇನ್ನೊಂದೆರಡು ಸಾಲುಗಳನ್ನು ನೋಡೋಣ: The Childs Toys & the Old Mans Reasons Are the Fruits of the Two seasons ಮಗುವಿನ ಆಟಿಕೆಗಳೇ ಅದರ ಪ್ರಪಂಚ ಹಾಗೂ ಸರ್ವಸ್ವ. ಮಲಗಿ ನಿದ್ರಿಸುವಾಗಲೂ ಒಂದು ಗೊಂಬೆಯನ್ನೋ, ಅಥವಾ ಇನ್ಯಾವುದಾರೊಂದು ಆಟದ ವಸ್ತುವನ್ನೋ ಎದೆಗವಚಿಕೊಂಡು ಮಗು ಸುಖ ನಿದ್ರೆಗೆ ಜಾರುವುದನ್ನು ನಾವೆಲ್ಲಾ ಕಂಡವರೇ. ಅಂತೆಯೇ ಜೀವನ ಸಂಧ್ಯಾಕಾಲದಲ್ಲಿರುವ ಒಬ್ಬ ಹಿರಿಯ ತನ್ನ ಅನುಭವದಿಂದ ಮಾಗಿ, ಹಣ್ಣಾಗಿ, ಪಕ್ವವಾಗಿರುತ್ತಾನೆ. ಈಗ ಆ ಹಿರಿಯನ ನಿಜವಾದ ಗಳಿಕೆ, ಆಸ್ತಿ ಎಂದರೆ ಈ ಅನುಭವದ ಮೂಟೆಗಳೇ. ಅವು ಸುಖಾಸುಮ್ಮನೆ ಬಂದವುಗಳಲ್ಲ. ಪ್ರತಿಯೊಂದು ಅನುಭವದ ಹಿಂದೆಯೂ ಒಂದೊಂದು ಕಾದಂಬರಿಗಾಗುವಷ್ಟು ಸರಕು ಇದ್ದಿರಬೇಕು. ಅವನ ಮುಖದ ಸುಕ್ಕುಗಳೇ ಅದಕ್ಕೆ ಸಾಕ್ಷಿ. ಹಲ್ಲಿಲ್ಲದ ಬೊಚ್ಚು ಬಾಯಲ್ಲಿ ಅವನು ನಗುವಾಗ ಅದೆಷ್ಟೋ ಅನುಭವಗಳು ಸದ್ದಿಲ್ಲದೇ ತೂರಿಹೋಗುತ್ತಾವೋ ಏನೋ! ವಾರ್ಧಕ್ಯ ಎಂದರೆ ಮತ್ತೆ ಶಿಶುತನಕ್ಕೆ ಜಾರುವುದು: ಹಣ್ಣೆಲೆಯನ್ನು ನೋಡಿ ಚಿಗುರೆಲೆ ಹಾಸ್ಯ ಮಾಡುವುದೂ ಉಂಟು. ಸಂದಿಗ್ಧ ಕಾಲದಲ್ಲಿ ಕಿರಿಯನಾದವನು ಹಿರಿಯನೊಡನೆ ಪರಾಮರ್ಶೆ ಮಾಡುವುದೂ ಉಂಟು. ತೀರಾ ಚಿಕ್ಕವನಾದರೆ ಕಥೆ ಹೇಳು ಎಂದು ಗೋಗರೆಯುವುದೂ ಉಂಟು. ಹೀಗೆ ಮಗುವಿಗೂ ಮುದಿಯನಿಗೂ ಬಿಡಿಸಲಾರದ ನಂಟು ಉಂಟೇ ಉಂಟು. ಮಗುವಿಗೆ ಆಟವಾಡಲು ಓರಗೆಯ ಸಮವಯಸ್ಕ ಮಕ್ಕಳಿಲ್ಲದಿದ್ದರೆ ಒಳ್ಳೆಯ ಜತೆ ಅಂದರೆ ಆಜ್ಜ, ಅಜ್ಜಿಯೇ ಅಲ್ಲವೇ? ಏಕೆಂದರೆ ಇಬ್ಬರಿಗೂ ಸಮಯದ ಒತ್ತಡ, ಧಾವಂತ ಇಲ್ಲ. ಎಲ್ಲವನ್ನೂ ನಿಧಾನವಾಗಿ ಮಾಡಿದರಾಯಿತು, ಸಲ್ಪ ಹೆಚ್ಚು ಕಡಿಮೆಯಾದರೂ ಆಕಾಶ ಕಳಚಿ ಬೀಳುವುದಿಲ್ಲ ಎನ್ನುವ ವಾಸ್ತವ ಹಿರಿಯನಿಗೆ ಅನುಭವದಿಂದ ದಕ್ಕಿದರೆ, ಮಗುವಿಗೆ ಅದು ಸಹಜ ಪ್ರಾಪ್ತಿ. ಅದಕ್ಕಾಗಿಯೇ ಮರಳಿ ಬಾಲ್ಯಕ್ಕೆ ಹೋಗೋಣ. ಬದುಕಿನ ನಿತ್ಯದ ಜಂಜಾಟದಲ್ಲಿ ನಾವು ಕಳೆದುಕೊಂಡ ಆ ಶಿಶು-ಸಹಜ-ವರ್ತನೆಯನ್ನು ಮತ್ತೆ ಆವಾಹಿಸಿಕೊಳ್ಳೋಣ. ಇದು ಕೇವಲ ಹಗಲುಕನಸು, ಸಾಧಿಸಾಲಾಗದ ಗೊಡ್ಡು ಆದರ್ಶ, ಕೈಲಾಗದವ ಮೈ ಪರಚಿಕೊಂಡಂತೆ ಎಂದೆಲ್ಲಾ ಅಂದುಕೊಂಡು ಒಳಗೊಳಗೇ ನೀವೂ ನಗುತ್ತಿಲ್ಲ ತಾನೇ? ಸರಿ ಹಾಗಾದರೆ, ಈ ನೆವದಿಂದಲಾದರೂ ನಿಮ್ಮ ಮುಖದಲ್ಲಿ ಒಂದಿಷ್ಟು ಮುಗುಳ್ನಗೆ ಬಂತಲ್ಲ, ಅಷ್ಟೇ ಸಾಕು ನನಗೆ. ಈಗ ನೋಡಿ, ನಕ್ಕು ಹಗುರಾಗುವುದೊಂದೇ ಇದಕ್ಕಿರುವ ಪರಿಹಾರ ಎಂದು ನೀವೂ ನಂಬುತ್ತೀರಲ್ಲ? ಹಾಗಾದರೆ ಒಮ್ಮೆ ಜೋರಾಗಿ ನಕ್ಕುಬಿಡಿ. ************************************

ಶಿಶುತನದ ಹದನದೊಳು ಬದುಕಲೆಳಸಿ… Read Post »

ಇತರೆ

ನಾನು,ನನ್ನ ಅನುವಾದವೂ

ಅನುಭವ ನಾನು,ನನ್ನ ಅನುವಾದವೂ ಸಮತಾ ಆರ್. ಒಂದು ದಿನ ಸಂಜೆ ಹೀಗೇ ಸುಮ್ಮನೆ ಕುಳಿತಿರುವಾಗ ಗೆಳತಿ ಸ್ಮಿತಾಳ ಫೋನ್ ಕರೆ ಬಂತು,”ನೋಡೆ,ನನ್ನದೊಂದು ಕವನ ಇಂಗ್ಲಿಷ್ ಗೆ ಅನುವಾದ ಮಾಡಿಸಿದ್ದೇನೆ,ಓದಿ ಹೇಗಿದೆ ಹೇಳು”ಎಂದು ಹೇಳಿ ಹಿಂದೆಯೇ ವಾಟ್ಸಾಪ್ ನಲ್ಲಿ ಕನ್ನಡ ಇಂಗ್ಲಿಷ್ ಎರಡೂ ಪದ್ಯ ಕಳುಹಿಸಿದಳು.ಓದಿದಾಗ ಕನ್ನಡ ಪದ್ಯ ಇಂಗ್ಲಿಷ್  ಅನುವಾದದಲ್ಲಿ ಓದಲು ಚಂದವೆನಿಸಿ  ,ಅವಳಿಗೆ ಕರೆ ಮಾಡಿ ಹೇಳಿದೆ,ಅವಳು ಕೇಳಿ ,ತಮಾಶೆಗೆ,”ಹಾಗಾದರೆ ನನ್ನದೊಂದು ಪದ್ಯ ಕಳಿಸುವೆ, ನೀನೂ ಅನುವಾದಿಸಿ ಖುಷಿ ಪಡು”ಅಂತ ಹೇಳುವುದೇ!! ನಾನೂ ಏನೋ ಒಂದು ಲಹರಿಯಲ್ಲಿ “ಹುಂ” ಎಂದೇನೋ ಹೇಳಿಬಿಟ್ಟೆ ,ಆದರೆ ಅವಳ ಪದ್ಯ ಬಂದು ಕುಳಿತ ಮೇಲೆಯೇ ನಿಜವಾದ ತಲೆನೋವು ಶುರುವಾಗಿದ್ದು.  ಮೊದಲನೆಯದಾಗಿ ನಾನು ಬರಹಕ್ಕೆ ತೊಡಗಿಸಿಕೊಂಡಿದ್ದು ಕೂಡ ಆಕಸ್ಮಿಕವಾಗಿ,ಎಲ್ಲೋ ಒಂದಷ್ಟು ಲಹರಿ,ಲಲಿತ ಪ್ರಬಂಧಗಳ ಮಾತ್ರ ಬರೆದಿರುವುದು.ಓದಿದ್ದು ರಸಾಯನಶಾಸ್ತ್ರ,ಮಾಡುತ್ತಿರುವುದು ಗಣಿತ ಶಿಕ್ಷಕಿಯ ಕೆಲಸ,ಸಾಹಿತ್ಯವನ್ನು ಒಂದು ಹವ್ಯಾಸ ವೆಂಬಂತೆ ಸುಮ್ಮನೆ ನನ್ನ ಪಾಡಿಗೆ ನಾನು ಒಂದಷ್ಟು ಕನ್ನಡ ಕಥೆ,ಕಾದಂಬರಿ ಗಳ ಓದಿಕೊಂಡಿದ್ದೆ.ಕವಿತೆಗಳ ಓದು ಸ್ವಲ್ಪ ದೂರವೇ,ಏಕೆಂದರೆ ಓದಿದರೆ ಅರ್ಥವಾಗದ ಕಷ್ಟ.ಇದರ ಜೊತೆಗೆ ಇಂಗ್ಲಿಷ್ ಭಾಷೆಯ ಜೊತೆ ನಂಟು ಬೆಳದಿದ್ದು ಕೂಡ ಒಂದು ಆಕಸ್ಮಿಕವೇ.ನಾನು ವೃತ್ತಿ ಪ್ರಾರಂಭಿಸಿದ ಮೊದಲ ವರ್ಷಗಳಲ್ಲಿ ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರ ಕೊರತೆ ಯಿಂದಾಗಿ ,”ಹೇಗೂ ವಿಜ್ಞಾನ ದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ತನಕ ಇಂಗ್ಲಿಷ್ ನಲ್ಲೆ ಕಲಿತಿರುವುದಲ್ಲವೆ ?ನೀವೇ ಇಂಗ್ಲಿಷ್ ಪಾಠ ಮಾಡಿ “ಎಂದ  ಮುಖ್ಯ ಶಿಕ್ಷಕರ ಕೋರಿಕೆಯನ್ನು ಮನ್ನಿಸಿ   ಪ್ರಾರಂಭಿಸಿದ  ಇಂಗ್ಲಿಷ್  ಶಿಕ್ಷಕಿ ಕೆಲಸ ಸುಮಾರು ಹತ್ತು ವರ್ಷಗಳವರೆಗೆ ಎಳೆದುಕೊಂಡು ಹೋಯಿತು. ಈ ಅವಧಿಯಲ್ಲಿ ಮಕ್ಕಳಿಗೆ ಕಲಿಸುವುದರ ಜೊತೆಗೆ ನಾನೂ ಸಾಕಷ್ಟು ಕಲಿತೆ ಎಂದರೆ ತಪ್ಪಾಗಲಾರದು.ಅದರಲ್ಲೂ ಇಂಗ್ಲಿಷ್.ಪದ್ಯಗಳು, ರೈಮ್ಸ್ ಗಳ ಮಕ್ಕಳಿಗೆ ಕಲಿಸುತ್ತಾ ಕಲಿಸುತ್ತಾ ನಾನೇ ಹೆಚ್ಚು ಖುಷಿ ಪಟ್ಟಿದ್ದೇನೆ. ಈ ಹಿನ್ನೆಲೆಯಲ್ಲಿ ಸ್ಮಿತಾ ಕೊಟ್ಟ ಪದ್ಯದ ಅನುವಾದ ಮಾಡಲು ಕುಳಿತಾಗ ಮೊದಲು ಎದುರಾದ ಪ್ರಶ್ನೆ ಸೂಕ್ತ ಪದಗಳನ್ನು ಹುಡುಕುವುದು.ಈಗ ಯಾವುದೇ ಒಂದು ಭಾಷೆಯ ಒಂದು ಪದ ತೆಗೆದುಕೊಂಡರೆ ಅದು ಬರಿ ಒಂದು ಸರಳ ನೇರ ಅರ್ಥವನ್ನೇನು ಹೊಂದಿರುವುದಿಲ್ಲ.ಅದರ ಬಳಕೆಗೆ ಅನುಗುಣವಾಗಿ ಬೇರೆ ಬೇರೆ ಸಂದರ್ಭಗಳಲ್ಲಿ ಬೇರೆ ಬೇರೆ ಅರ್ಥ ಕೊಡುತ್ತಾ ಹೋಗುತ್ತದೆ.ಅಲ್ಲದೆ ಭಾಷೆ ಅನ್ನೋದು ಕೇವಲ ಒಂದು ಸಂಪರ್ಕ ಮಾದ್ಯಮ ಮಾತ್ರ ಅಲ್ಲ.ಒಂದು ಭಾಷೆ ಎಂದರೆ ನನಗನ್ನಿಸುವಂತೆ ಅದನ್ನಾಡುವ ಜನರ ಕಲೆ,ಸಂಸ್ಕೃತಿ, ಪರಂಪಾನುಗತವಾಗಿ ಬಂದಿರುವ ನಂಬಿಕೆ,ಆಚರಣೆಗಳು ಎಲ್ಲವೂ ಸೇರಿ ಆಗಿರುವ ಒಂದು ಜೀವಂತ ಪ್ರಕ್ರಿಯೆ ಭಾಷೆ.ಕೆಲವೊಂದು ರೂಡಿ ಆಚರಣೆಗಳು ಒಂದು ಪ್ರದೇಶ,ದೇಶ,ಇಲ್ಲವೇ ಒಂದು ನಿರ್ದಿಷ್ಟ ಜನಾಂಗಕ್ಕೆ ಸೀಮಿತವಾಗಿದ್ದು ಅವುಗಳ  ಸೂಚಿಸುವ ಪದಗಳು ,ಬೇರೊಂದು ಭಾಷೆಯನ್ನಾಡುವ,ಬೇರೆಯೇ ಪ್ರದೇಶಕ್ಕೆ ಸೇರಿರುವ, ಆ ನಿರ್ದಿಷ್ಟ ಆಚರಣೆ, ರೂಡಿಗಳು ಇರದೇ ಇರುವ ಜನರ ಭಾಷೆಯಲ್ಲಿ ಅವುಗಳ ಸೂಚಿಸುವ ಯಾವುದೇ ಪದಗಳು ಇಲ್ಲದಿರಬಹುದು. ಮೂಲಕ್ಕೆ ತೀರ ಹತ್ತಿರದ ಪದ ಬಳಸಿದರೂ ಅಪರಿಚಿತ ವೆನಿಸಬಹುದು.ಹಾಗಾಗಿ ಪದದ ಜೊತೆಗೆ ಅದಕ್ಕೆ ಸಂಬಂಧಿಸಿದ ಎಲ್ಲವನ್ನೂ ಇನ್ನೊಂದು ಭಾಷೆಯಲ್ಲಿ ಹೇಳುವುದು ಕಷ್ಟವೇ.ಉದಾಹರಣೆಗೆ ಹೇಳುವುದಾದರೆ ಸ್ಮಿತಾಳ ಒಂದು ಕವಿತೆಯಲ್ಲಿ ಕೊಡ ಅನ್ನುವ ಪದಕ್ಕೆ ಸಂವಾದಿಯಾದ ಇಂಗ್ಲಿಷ್ ಪದ ಹುಡುಕುವುದು ಬಹಳ ಕಷ್ಟವೇ ಆಯಿತು.ಬಾವಿಯಿಂದ ನೀರು ಸೇದಲು ಕೊಡ ಬಳಸುವ ಬದಲು ವಿದೇಶಗಳಲ್ಲಿ pail ಅನ್ನುವ ಬಕೆಟ್ ಆಕಾರದ ಪಾತ್ರೆ ಬಳಸುತ್ತಾರೆ.ಜ್ಯಾಕ್ ಅಂಡ್ ಜಿಲ್ ಪದ್ಯದಲ್ಲಿ ಬರುತ್ತೇ ನೋಡಿ.ಹಾಗೆ ಯಾವ ಶಬ್ದಕೋಶವನ್ನು  ಹುಡುಕಿದರೂ ಯಾವ ಪದವೂ ಸಮಾಧಾನ ತರದೆ ಕೊನೆಗೆ ಹತ್ತಿರ ಎನಿಸುವ pitcher ಬಳಸಿದ್ದಾಯಿತು. ಹಾಗೆಯೇ ಇನ್ನೂ ಕೆಲವು ಆಚರಣೆ ಗಳ ಗಮನಿಸಿದಾಗ,ಅಯ್ಯಪ್ಪನ ವ್ರತ  ನಮ್ಮ ದೇಶದ ಒಂದು ವಿಶಿಷ್ಟ ಆಚರಣೆ.ಶೋಭಾ ಹಿರೆಕೈ ಅವರ ಪದ್ಯದ ಅನುವಾದ ಏನೋ ಮಾಡಿದೆ,ಆದರೆ.ಅದು ಭಾರತೀಯ ರಲ್ಲದವರು ಓದಿದರೆ ಅವರಿಗೆ, ಆ ವ್ರತ ಮಾಡುವ ಕ್ರಮ,ಅದರ ಹಿನ್ನೆಲೆ,ಹಿಂದಿರುವ ವಿವಾದ ಇವುಗಳೆಲ್ಲ ಗೊತ್ತಿರದಿದ್ದರೆ ,ಕವನ ಅವರನ್ನು ಹೇಗೆ ತಲುಪೀತು?.    ಹಾಗೆಯೇ ಸುನೀತ ರವರ ಒಂದು ಪದ್ಯದಲ್ಲಿ ಬರುವ ಪಂಚಾಯತ್ ಪದ ಕೂಡ ಕಾಡಿಸಿತು.ಬೇರೆ ಬೇರೆ ದೇಶಗಳ ಆಡಳಿತ ವ್ಯವಸ್ಥೆ ಬೇರೆ ಬೇರೆ ಹಾಗಾಗಿ ಎಲ್ಲ ಕಡೆ ಹೊಂದುವಂಥ ಪದಕ್ಕಾಗಿ ತಡಕಾಡಿ, ಕೊನೆಗೆ council ಪದ ಬಳಸಿದರೂ ನನಗೆ ಅಷ್ಟು ಸಮಾಧಾನವಿಲ್ಲ. ಇನ್ನು “ಜಲರಾಶಿ”ಪದ ಬಂದಾಗ.ನನ್ನ ವಿಜ್ಞಾನ ಓದಿದ ತಲೆ “ಛೆ,ಕೇವಲ ಘನ ವಸ್ತುಗಳನ್ನ ಮಾತ್ರ ರಾಶಿ ಮಾಡಲು ಸಾಧ್ಯ,ದ್ರವಗಳನ್ನು ರಾಶಿ ಮಾಡಲಾದೀತೇ”ಎಂದು ಗುಮಾನಿ ಎಬ್ಬಿಸಿ,”ಪದ ಪದ ಅನುವಾದ ಬೇಡ ಬಿಡು “ಎಂದುಕೊಂಡು ಅದನ್ನು aquatic treasure ಮಾಡಿದ್ದಾಯಿತು. ಹಾಗೆ ಇನ್ನೊಂದೆರಡು ಕವನಗಳ ಅನುವಾದಿಸುವಾಗಾ ಇಂಗ್ಲಿಷ್ ಗ್ರಾಮರ್ ಸರಿಯಿದೆಯ?ಅನ್ನುವ ಸಣ್ಣ ಗುಮಾನಿ ಬೇರೆ ಕಾಡಿ ನನ್ನ ಕೆಲವು ಇಂಗ್ಲಿಷ್ ಶಿಕ್ಷಕ ಸ್ನೇಹಿತರನ್ನು ಕೇಳಿದಾಗ ಓರ್ವ ಸ್ನೇಹಿತೆ “ಗ್ರಾಮರ್ ಬಗ್ಗೆ ಎಲ್ಲಾ ತಲೆ ಕೆಡಿಸಿಕೊಳ್ಳಬೇಡಿ,ಪದ್ಯದ ಲಯ ತಪ್ಪದ ಹಾಗೆ,ಕೇವಲ ಪದದಿಂದ ಪದ ಅನುವಾದ ಮಾಡುವ ಬದಲು ಇಡಿಯಾಗಿ ಭಾವವನ್ನು ಹಿಡಿಯುವ ಪ್ರಯತ್ನ ಮಾಡಿ”ಎಂದು ಸಲಹೆ ಕೊಟ್ಟರು. ಅದರಂತೆ ಅನುವಾದಿಸಲು ಇರುವ ಕವನವನ್ನು ಮತ್ತೆ ಮತ್ತೆ ಓದಿಕೊಂಡು,ಅನುಮಾನ ಬಂದ ಕಡೆ ಮೂಲ ಕವಿಯ ಬಳಿಯೇ ಮಾತನಾಡಿ, ಮೊದಲಿಗೆ ಮೂಲ ಪದ್ಯ ಏನನ್ನ ಹೇಳಲು ಹೊರಟಿದೆ ಅನ್ನುವುದರ ಕಡೆಗೆ ಗಮನ ನೀಡಲು ಪ್ರಯತ್ನಿಸಿದೆ.ಅದರ ಬಳಿಕವೇ ನನ್ನ ಲಹರಿ ಉಕ್ಕಿದ ಹಾಗೆ ಅನುವಾದಿಸಿದೆ. ಬಳಿಕ ಅನುವಾದವನ್ನು ಮತ್ತೆ ಮತ್ತೆ ಓದಿಕೊಂಡು,ಮೂಲದ ಜೊತೆಗೆ ಹೋಲಿಸಿಕೊಂಡು ಸಾಧ್ಯವಾದಷ್ಟು ತಿದ್ದಿ ತೀಡಿ ನಂತರ ಮೂಲ ಕವಿಗೆ ತೋರಿಸಿ ಅವರು ಗ್ರೀನ್ ಸಿಗ್ನಲ್ ಕೊಟ್ಟ ಬಳಿಕವೇ ಸಮಾಧಾನ. ಕವಿತೆ ಯೊಂದನ್ನು ಅನುವಾದಿಸಲು ಕುಳಿತಾಗ ,ಗಣಿತ ಶಿಕ್ಷಕಿಯಾದ ನನಗೆ ಸಮೀಕರಣ ವೊಂದನ್ನು ಬಿಡಿಸಿದ ಹಾಗೆಯೇ ಅನ್ನಿಸುತ್ತದೆ.ಒಂದು ಸಮಸ್ಯೆ ಯನ್ನ ಅರ್ಥೈಸಿಕೊಂಡು,ಅದಕ್ಕೆ ಸೂಕ್ತ ನಿಯಮಗಳು,ಸ್ವಯಂ ಸಿದ್ಧಗಳ  ಬಳಸಿ , ಹಂತ ಹಂತವಾಗಿ ಬಿಡಿಸಿದಾಗ ಸಿಗುವ ಸಂತೋಷವೇ,ನನಗೆ ಕವಿತೆಯೊಂದನ್ನು ಅನುವಾದಿಸಿ ದಾಗ ಕೂಡ ಸಿಕ್ಕಂತಾಗುತ್ತದೆ. ಅನುವಾದಿಸಿದ ಬಳಿಕ  ಸಂಗಾತಿಯಲ್ಲಿ ಪ್ರಕಟಗೊಂಡು ಓದಿದವರಲ್ಲಿ ಕೆಲವರು ನನ್ನನ್ನು ಸಂಪರ್ಕಿಸಿ,”ಅನುವಾದ ಚೆನ್ನಾಗಿ ಮಾಡಿದ್ದೀರಿ,ಮುಂದುವರೆಸಿ “ಎಂದು ಪ್ರೋತ್ಸಾಹಿಸಿದಾಗ ತುಂಬಾ ಖುಷಿಯಾಯಿತು. ನಾನೆಂದೂ ಕವಿತೆ ಬರೆದವಳಲ್ಲಾ ಆದರೆ ಕವಿತೆ ಗಳ ಅನುವಾದ ಮಾಡಲು ಶುರು ಮಾಡಿದ ಬಳಿಕ ಕಾವ್ಯಕ್ಕಿರುವ ಅದ್ಭುತ ಶಕ್ತಿ ಯ ಅರಿವು ಸ್ವಲ್ಪ ಸ್ವಲ್ಪವೇ ಆಗುತ್ತಿದೆ.ಅನುವಾದದಿಂದಾಗಿ ಇನ್ನೊಬ್ಬರ ಭಾವ ಪ್ರಪಂಚದ ಒಂದು ತುಣುಕನ್ನಾದರೂ ನನ್ನದಾಗಿಸಿಕೊಳ್ಳುವ ಸಂಭ್ರಮ.ಇದೊಂದು ರೀತಿ ಕನ್ನಡದ ಪದ್ಯದಿಂದ ಬಸಿರಾಗಿ ಇಂಗ್ಲಿಷ್ ಮಗುವೊಂದನ್ನು ಹೆರುವಂತಹ ಬಾಡಿಗೆ ತಾಯಿಯ ಕೆಲಸದಂತಾಗಿ ಬಿಟ್ಟಿದೆ ನನಗೆ. *******************************

ನಾನು,ನನ್ನ ಅನುವಾದವೂ Read Post »

ಇತರೆ

ಪ್ರೇಕ್ಷಕ ಪರಂಪರೆಯ ಅನ್ನದಾತರು

ಲೇಖನ ಪ್ರೇಕ್ಷಕ ಪರಂಪರೆಯ ಅನ್ನದಾತರು ಮಲ್ಲಿಕಾರ್ಜುನ ಕಡಕೋಳ ಯಶಸ್ವಿ ನಾಟಕವೊಂದರ ಕುರಿತು ಮಾತಾಡುವಾಗ ಎಂಥವರಿಗೂ ಆಧುನಿಕ ರಂಗಭೂಮಿ ಸಂದರ್ಭದಲ್ಲಿ ನಿರ್ದೇಶಕ ಪರಂಪರೆಯತ್ತ ಆದ್ಯಗಮನ. ಹಾಗೇನೆ ವೃತ್ತಿರಂಗಭೂಮಿ ಸಂದರ್ಭದಲ್ಲಿ ನಟನ ಪರಂಪರೆಯದು ಧುತ್ತನೆ ನೆರವಿಗೆ ನಿಲ್ಲುವ ನಿಲುವು. ನಮ್ಮ ಪ್ರೊಸಿನಿಯಮ್ ಥಿಯೇಟರ್ ಪ್ರದರ್ಶನಗಳು ಪ್ರೇಕ್ಷಕರೆಂಬ ಐಕಾನ್ ಗಳ ಮೂಲಕವೇ ಸಾಂಸ್ಕೃತಿಕ ಮೌಲ್ಯ ಗಳಿಸಿವೆಯೆಂಬ ದ್ಯಾಸವೇ ಇರಲ್ಲ. ಅಷ್ಟು ಮಾತ್ರವಲ್ಲದೇ ರಂಗಸಂಸ್ಕೃತಿಯ ಅಭಿವೃದ್ಧಿ ಹಾಗೂ ವಿಕಾಸದ ಸಾಧ್ಯತೆಯ ಕ್ಷಿತಿಜ ವಿಸ್ತಾರಗೊಳ್ಳುವುದೇ ಪ್ರೇಕ್ಷಕ ಪ್ರಭುಗಳಿಂದ. ಇಂತಹ ಮಹತ್ತರ ಸಂಗತಿಗಳನ್ನೇ ನೇಪಥ್ಯಕ್ಕೆ ಜರುಗಿಸುವ ಜಾಣ ಕೆಲಸ ಕೆಲವು ರಂಗಪಂಡಿತರು ಎಸಗುತ್ತಾರೆ. ಅಷ್ಟೇಯಾಕೆ ಕೆಲವೊಮ್ಮೆ ಹ್ಯಾವಕ್ಕೆ ಬಿದ್ದಂತೆ ನಿರ್ದೇಶಕ ಹಾಗೂ ನಟನಾ ಪರಂಪರೆ ಕುರಿತೇ ಹೆಚ್ಚು ಹೆಚ್ಚು ಚರ್ಚೆಯ ಒಣಪಾಂಡಿತ್ಯ ಮೆರೆಯುತ್ತಾರೆ. ಸಿನೆಮಾ, ನಾಟಕ, ಭಾಷಣ, ಪುಸ್ತಕ ಇತರೆ ಎಲ್ಲ ಸಾಂಸ್ಕೃತಿಕ ಜ್ಞಾನಶಿಸ್ತು ಪ್ರದರ್ಶನಗಳ ಕುರಿತು ನಿಕಷದ ಚಿಂತನೆಗಳು ಅಭಿವ್ಯಕ್ತಿಯ ಸ್ವರೂಪ ಪಡೆದುಕೊಳ್ಳುವಾಗ ಪ್ರೇಕ್ಷಕ, ಕೇಳುಗ, ಓದುಗ ಸಹೃದಯತೆಯ ಮಹತ್ವದ ಸ್ಥಾನವನ್ನು ಅಲಂಕರಿಸುತ್ತಾನೆಂಬುದು ಮರೆಯಲಾಗದು. ನಮ್ಮ ಪರಂಪರಾಗತ ಸಂಕಥನ ಪಾಠ್ಯಗಳಲ್ಲಿ ಇದೆಲ್ಲ ಉಲ್ಲೇಖನೀಯ ವಿಷಯ . ಅದರಲ್ಲೂ ವಿಶೇಷವಾಗಿ ವೃತ್ತಿರಂಗಭೂಮಿಯಲ್ಲಿ ಹಲವು ಸಾಂಸ್ಕೃತಿಕ ಪರಂಪರೆಗಳು ಶಿಖರಪ್ರಾಯದ ಉಲ್ಲೇಖಿತ ಮಟ್ಟದಲ್ಲಿವೆ. ಅಲ್ಲಿ ಪ್ರಮುಖವಾಗಿ ನಟನಾ ಪರಂಪರೆ, ರಂಗ ಸಂಗೀತ ಪರಂಪರೆ, ರಂಗಸಜ್ಜಿಕೆಗಳ ಪರಂಪರೆಗಳು ಆಕರ ಸ್ಥಾನ ಪಡಕೊಂಡಿವೆ. ಅಷ್ಟೇ ಮಹತ್ವದ ಮತ್ತೊಂದು ಪರಂಪರೆ ಅಲ್ಲಿದೆ. ಅದುವೇ ಸಹೃದಯ ಪ್ರೇಕ್ಷಕ ಪರಂಪರೆ. ಎಷ್ಟೋ ಬಾರಿ ವೃತ್ತಿರಂಗಭೂಮಿಯ ನಾಟಕಗಳಲ್ಲಿ ಪ್ರೇಕ್ಷಕ ಅದೆಂತಹ ಮಹತ್ವ ಪಡೆದುಕೊಳ್ಳುತ್ತಾನೆಂದರೆ, ಕಲಾವಿದರು ನಾಟಕದ ನಡುವೆಯೇ ಪ್ರೇಕ್ಷಕರೊಂದಿಗೆ ಸಂಭಾಷಣೆಗೆ ಇಳಿಯುವ ಸನ್ನಿವೇಶಗಳು ಸ್ವಾಭಾವಿಕವಾಗಿ ಸೃಷ್ಟಿಯಾಗುತ್ತವೆ. ವೃತ್ತಿ ರಂಗದ ನಟನಟಿಯರು ಯಾವುದೇ ಮಡಿವಂತಿಕೆ ಇಲ್ಲದೇ ಕಾಕಾ, ಅಣ್ಣಾ, ಮಾಮಾ ಅಂತ ಪ್ರೇಕ್ಷಕರೊಂದಿಗೆ ಸಂಬೋಧನೆಗೆ ತೊಡಗುವ ಸಂದರ್ಭೋಚಿತ ಸನ್ನಿವೇಶಗಳು ನಗೆಗಡಲ ಜಳಕ ಮಾಡಿಸುತ್ತವೆ. ಇನ್ನು ಕಲಾವಿದರಿಂದ ಸುಪರ್ ಹಿಟ್ ಡೈಲಾಗ್ ಕೇಳಿದೊಡನೆ, ಅಂತಹದ್ದೇ ಮನಮೆಚ್ಚುಗೆಯ ರಂಗಸಂಗೀತ ಕೇಳಿದಾಗ ಸಂತುಷ್ಟರಾದ ಪ್ರೇಕ್ಷಕರು ಸಿಳ್ಳು, ಚಪ್ಪಾಳೆಗಳ ಸುರಿಮಳೆಗೈಯ್ಯುತ್ತಾರೆ. ಅದು ಅಷ್ಟಕ್ಕೆ ತಮಣಿಯಾಗದೇ ಪ್ರೇಕ್ಷಕಾಂಗಣದ ಸಂತಸ ಸಂಭ್ರಮದ ಎಲ್ಲೆ ಮೀರಿ ಒನ್ಸ್ ಮೋರ್ ಎಂದು ಭಾವ ಪರವಶರಾಗಿ ಜೋರಾಗಿ ಕೂಗುತ್ತಾರೆ. ಅವರ ಮೆಚ್ಚುಗೆಯ ಕೂಗಿಗೆ ಗೌರವತೋರಿ ಮತ್ತದೇ ಹಾಡು, ಡೈಲಾಗ್ ಮರುಕಳಿಸುತ್ತವೆ. ಹೀಗೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ಅಪರೂಪದ ರಂಗಸಂಸ್ಕೃತಿಯೊಂದರ ಸಂಪ್ರೀತಿಯ ಸಂವಾದ, ಸಂವಹನವೇ ಏರ್ಪಡುತ್ತದೆ. ವರನಟ ಡಾ. ರಾಜಕುಮಾರ ಅವರು ವೃತ್ತಿರಂಗಭೂಮಿಯ ರಂಗಮೌಲ್ಯ ಮೆರೆದ ಪ್ರಾತಃಸ್ಮರಣೀಯರು. ಅಂತೆಯೇ ಅವರು ಪ್ರೇಕ್ಷಕ ಪ್ರಭುಗಳಿಗೆ ಅಭಿಮಾನಿ ದೇವರುಗಳೆಂತಲೇ ಕರೆದು ಗೌರವ ತೋರುತ್ತಿದ್ದರು. ಮಾಸ್ಟರ್ ಹಿರಣ್ಣಯ್ಯನವರು ಯಾವತ್ತೂ ಪ್ರೇಕ್ಷಕರನ್ನು ಅನ್ನದಾತರೆಂದೇ ಬಾಯ್ತುಂಬಾ ಅಂತಃಕರಣ ತುಂಬಿ ಪ್ರೀತ್ಯಾದರ ತೋರುತ್ತಿದ್ದರು. ಏಣಗಿ ಬಾಳಪ್ಪ ಹಾಗೂ ಇನ್ನು ಕೆಲವು ಕಂಪನಿಗಳಲ್ಲಿ ಪ್ರೇಕ್ಷಕರಿಗೆ ಶರಣು ಹೇಳುವ ಸನ್ನಿವೇಶಗಳು ರಂಗಪ್ರಯೋಗದಂತೆ ಮಹತ್ವದ ಸ್ಥಾನ ಗಳಿಸಿದ್ದವು. ಕ್ಯಾಂಪ್ ಮಾಡಿದ ಊರುಗಳಲ್ಲಿ ಆಯ್ದ ಪ್ರೇಕ್ಷಕರಿಗೆ ಗೌರವಪಾಸ್ ನೀಡಿ ನಾಟಕಕ್ಕೆ ಆಮಂತ್ರಿಸುವ ಪದ್ಧತಿಯೇ ಇತ್ತು. ವೃತ್ತಿ ರಂಗಭೂಮಿಯ ಆರಂಭದ ಅಂದಿನಿಂದ ಇಂದಿನವರೆಗೂ ಒಂದೂವರೆ ಶತಮಾನ ಕಳೆದರೂ ಪ್ರೇಕ್ಷಕ ಮಹಾಶಯರ ಮೇಲಿನ ಗೌರವ, ಪ್ರೀತಿ, ವಿಶ್ವಾಸ ದಿನೇ ದಿನೇ ಹೆಚ್ಚುತ್ತಲೇ ಬಂದಿದೆ. ಅದೊಂದು ಅಮೂಲ್ಯ ಪರಂಪರೆ ಮಾತ್ರವಾಗಿ ಬೆಳೆಯದೇ ರಂಗಸಂಸ್ಕೃತಿಯ ಅನನ್ಯತೆಯಾಗಿ ಬೆಳೆಯುತ್ತಲೇ ಮುನ್ನಡೆ ಸಾಧಿಸಿದೆ. ಇಂತಹ ಸಹೃದಯ ಪರಂಪರೆ ಆಧುನಿಕತೆಯ ಬೇರೊಂದು ರಂಗಪ್ರಕಾರಗಳಲ್ಲಿ ಹುಡುಕಿದರೂ ನಮಗೆ ಕಾಣಸಿಗುವುದಿಲ್ಲ. ಪ್ರಾರಂಭಿಸಲ್ಪಟ್ಟ ನಾಟಕ ಇನ್ನೊಂದು ಮಹತ್ವದ ಸನ್ನಿವೇಶದೊಂದಿಗೆ ಮಂಗಲ ಹಾಡುತ್ತದೆ. ಯಾವತ್ತೂ ನಮ್ಮನ್ನು ಪ್ರೋತ್ಸಾಹಿಸಿ ನಮಗೆ ಅನ್ನ ನೀಡುತ್ತಿರುವ ತಂದೆ ತಾಯಿ ಸ್ವರೂಪಿ ಅನ್ನದಾತ ಪ್ರೇಕ್ಷಕ ಮಹಾಪ್ರಭುಗಳ ಅಡಿದಾವರೆಗಳಿಗೆ ಪೊಡಮೊಟ್ಟು…. ಎಂಬ ಸವಿನಯ ಪ್ರಾರ್ಥನೆಯ ಮಾತುಗಳು ಲೆಕ್ಚರ್ ಸೀನ್ ಎಂಬ ನುಡಿಗಟ್ಟಿನೊಂದಿಗೆ ಇವತ್ತಿಗೂ ಎಲ್ಲಾ ನಾಟಕ ಕಂಪನಿಗಳು ಪ್ರೇಕ್ಷಕ ಪರಂಪರೆಗೆ ಗೌರವಿಸುವ ಪರಿಪಾಠಗಳನ್ನು ತಪ್ಪದೇ ಪರಿಪಾಲಿಸುತ್ತಾ ಬಂದಿವೆ. ಇದು ರಂಗಸಂಸ್ಕೃತಿಯ ಮಹೋನ್ನತ ಪ್ರೇಕ್ಷಕ ಪರಂಪರೆಗೆ ಸಲ್ಲುವ ಗೌರವ **************************

ಪ್ರೇಕ್ಷಕ ಪರಂಪರೆಯ ಅನ್ನದಾತರು Read Post »

ಇತರೆ

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಜೊಸೆಫ್ ಸಿದ್ದಕಟ್ಟೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಗ್ರಾಮದ ಶ್ರೀ ಜೊಸೆಫ್ ಸಿದ್ದಕಟ್ಟೆಯವರು ಮಂಗಳೂರಿನ ಕಾರ್ಮೆಲ್ ಚರ್ಚಿನ ಫಾದರ್ ಆಗಿ ಸೇವೆ ಸಲ್ಲಿಸುತಿದ್ದಾರೆ. ಬಹಳ ಚಿಕ್ಕ ವಯಸ್ಸಿನಿಂದಲೇ ಬರವಣಿಗೆಯಲ್ಲಿ ತನ್ನನ್ನು ತೊಡಗಿಸಿಕೊಂಡು, ಕೊಂಕಣಿಯ ಯುವ ಕವಿ ಜೊಸಿ ಸಿದ್ದಕಟ್ಟೆ ಎಂಬ ಕಾವ್ಯನಾಮದಿಂದ ಅತ್ಯಂತ ಪ್ರಭಾವಶಾಲಿಯಾಗಿ ಹೊರಹೊಮ್ಮಿದ್ದಾರೆ. ಕಿಟಾಳ್ ಪತ್ರಿಕೆಯ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ “ಕಿಟಾಳ್ ಯುವ ಪರಸ್ಕಾರ್” 2011 ರಲ್ಲಿ, ಇನ್ನೊಂದು ಪ್ರತಿಷ್ಠಿತ ಪ್ರಶಸ್ತಿಯಾದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ್, 2013 ರಲ್ಲಿ ಜೊಸಿ ಸಿದ್ದಕಟ್ಟೆಯವರಿಗೆ ಲಭಿಸಿದೆ. ಸಾಹಿತ್ಯ ರಚನೆಗಳು: “ಪಾವ್ಸಾದೋಣು” ಕವಿತಾ ಸಂಕಲನ (2008) “ಮೋರಾನ್ ಸಾಂಡ್ಲೆಲಿ ಪಾಕಾಂ” ಕವಿತಾ ಸಂಕಲನ (2011) “ಉಜ್ಯಾ ತುಜ಼ೆ ವೇಂಗೇಂತ್” ಕವಿತಾ ಸಂಕಲನ (2015) ಯೂಟರ್ನ್ ( ಅಂಕಣ ಬರಹಗಳ ಸಂಕಲನ) ಕಾಜುಲೊ ( ನ್ಯಾನೋ ಕತೆಗಳ ಸಂಕಲನ) ಕಲ್ವಾರಿರ್ ರಾಜಿ ಸಂಧಾನ. ಇವಿಷ್ಟೂ ಪುಸ್ತಕಗಳು ಪ್ರಕಟಗೊಂಡು ಓದುಗ ವಲಯದೊಳಗೆ ಪ್ರಸಿದ್ಧಿಯನ್ನು, ಅಪಾರ ಮನ್ನಣೆಯನ್ನು ಪಡೆದಿವೆ. ನಾಟಕ ರಚನೆ , ನಿರ್ದೇಶನಗಳಲ್ಲೂ ತನ್ನನ್ನು ತೊಡಗಿಸಿಕೊಂಡಿರುವ ಫಾ| ಜೊಸಿ ಸಿದ್ದಕಟ್ಟೆಯವರು ಸಾಹಿತ್ಯದ ಎಲ್ಲಾ ಪ್ರಾಕಾರಗಳಲ್ಲೂ  ಕೈಯಾಡಿಸಿ ಪರಿಣಿತಿಯನ್ನು ಪಡೆದಿದ್ದಾರೆ. ಉದಾ: ಹೈಕು, ಗಝಲ್, ಇತ್ಯಾದಿ. ಜೊಸಿ ಸಿದ್ದಕಟ್ಟೆಯವರ ಎರಡು ಕವಿತೆಗಳು ನಿಮ್ಮ ಓದಿಗಾಗಿ: ಮೊರಾನ್ ಸಾಂಡ್ಲಲಿಂ ಪಾಕಾಂ – ಕುಮೆರಿಂತ್ ಮೊರಾನ್ ಸಾಂಡ್ಲಲಿಂ ಪಾಕಾಂ ಆರಾವ್ನ್ ಆರಾವ್ನ್ ಹಾಡ್ಲಿಂ ಥೊಡಿಂ ಧಾಕ್ಟಿಂ, ಕಾಂಯ್ ಥೊಡಿಂ ವ್ಹಡ್ಲಿಂ ಆನಿ ತಾಣಿಂಚ್ ಆಮ್ಚಿಂ ಮನಾಂ ಫೊಡ್ಲಿಂ ಬಬ್ಲಾನ್ ಏಕ್ ಪಾಕ್ ಚೊರುನ್ ವೆಲೆಂ ಮಿತ್ರಾಂಕ್ ದಾಕವ್ನ್ ಹರ್ಧೆಂ ಫುಲಂವ್ಕ್ ಬಯ್ಯಾನ್ ವಿಚಾರಿನಾಸ್ತಾಂ ಲಿಪಯ್ಲೆಂ ಏಕ್ ಬುಕಾಪಾನಾಂ ಇಡ್ಯಾಂತ್ ಪಿಲಾಂ ಕಾಡುಂಕ್ ದಾಟ್ಟುಕೀ ಏಕ್ ಜಾಯ್ ಆಸ್ಲೆಂ ಚಾಂಪ್ಯಾವನಾಂತ್ ಆಪೊವ್ನ್ ಗುಪ್ತಿಂ ‘ತಾಕಾ’ ದೀವುಂಕ್ ವರದಕ್ಕ ವಿಚಾರಿ ಮ್ಹಣ್ ಮಾಮ್ಮಿನ್ ದಿಲೆಂ ಕಿಸ್ಣಾಚ್ಯಾ ಮಾತ್ಯಾಕ್ ಖೊವಂವ್ಕ್ ಮಾಗೀರ್ ಉರಲ್ಲಿಂ ಮ್ಹಾಕಾ ಮೊಡ್ಕುರಿಂ ಆನಿ ರಡ್ಕುರಿಂ ಖಂಯ್ಚ್ಯಾ ಕರ್ಮಾಕ್? ಕೊಣೆಂ ಫಾರ್ಲಿಂ, ಕೊಣೆಂ ಲಿಪಯ್ಲಿಂ ತಾಚೆರ್ ಸೊಧ್ ಹಾಂವೆಂ ಚಲಯ್ಲೊ ‘ಹಾಂವೆಂ ಹಾಡಲ್ಲಿಂ ಪಾಕಾಂ ತುಮಿ ಕಶಿಂ ಚೊರ್ಲಿಂ?’ ಬಯ್ಯಾ ಹಾಸ್ಲೆಂ ‘ಹಾಡಲ್ಲಿಂ ವ್ಹಯ್, ಪುಣ್ ಮೊರಾನ್ ಸಾಂಡ್ಲಲಿಂ!’ ದೊಳ್ಯಾ ಖಾಂಚಿಂತ್ಲಿಂ ದುಕಾಂ ಪುಸುನ್ ಭಾಯ್ರ್ ಯೆತಾನಾ ಬೋಳ್ ರುಕಾರ್ ಭಿಜಲ್ಲೊ  ಕಾವ್ಳೊ ಆಂಗ್ ಪಾಪ್ಡುಂಕ್ ಲಾಗ್ಲೊ ಥೆಂಬೆ ಉಸಾಳ್ಳೆಚ್ ತೊ ಸುಶೆಗಾತ್ ಉಬ್ಲೊ -ಜೊ. ಸಿ. ಸಿದ್ದಕಟ್ಟೆ “ನವಿಲು ತೊರೆದ ಗರಿಗಳು” ಬಯಲಲ್ಲಿ ನವಿಲು ತೊರೆದ ಗರಿಗಳನ್ನು ಆರಿಸಿ ಆರಿಸಿ ತಂದಿದ್ದೆ. ಕೆಲವು ಚಿಕ್ಕವು, ಇನ್ನು ಕೆಲವು ದೊಡ್ಡವು, ಆಮೇಲೆ .. ಅವೇ ನಮ್ಮ ಮನಗಳನ್ನು ಒಡೆದವು. ಬಬ್ಲು ಒಂದು ಕದ್ದೊಯ್ದ ಅವನ ಗೆಳೆಯರಿಗೆ ತೋರಿಸಿ ಎದೆ ಉಬ್ಬಿಸಲು, ಅಕ್ಕ ಕೇಳದೆ ಎತ್ತಿಟ್ಟಳು ಪುಸ್ತಕದ ನಡುವೆ ಮುಚ್ಚಿಟ್ಟು ಮರಿ ಮಾಡಲು, ಅಣ್ಣನಿಗೂ ಒಂದು ಗರಿ ಬೇಕಿತ್ತು ಸಂಪಿಗೆ ವನದ ಮರೆಯಲ್ಲಿ “ಅವಳಿಗೆ” ಕೊಡಲು, ವರದಕ್ಕ ಕೇಳಿದರೆಂದು ಅಮ್ಮ ಕೊಟ್ಟಳು ಅವರ ಕೃಷ್ಣನ ತಲೆಗೆ ಸಿಕ್ಕಿಸಲು, ಇನ್ನು ನನಗೆ ಉಳಿದದ್ದು ಬರೀ ಹರಿದವು ಮತ್ತು ಮುರಿದವು …. ಯಾವ ಕರ್ಮಕ್ಕೆ?? ಯಾರ‍್ಯಾರೋ  ಮುಚ್ಚಿಟ್ಟರು, ಎತ್ತಿಟ್ಟರು, ಕದ್ದೊಯ್ದರು.. ಜೋರಾಗಿ ಗದರಿಸಿದೆ ಕೋಪ ತಡೆಯದೆ “ನಾನು ತಂದ ಗರಿಗಳವು.. ಹೇಗೆ ಕದ್ದಿರಿ ನೀವು?” ಅಕ್ಕ ನಗುತ್ತ… “ನೀನು ತಂದಿದ್ದು ಹೌದು.. ಆದರೂ… ನವಿಲು ತಾನೇ ತೊರೆದಿದ್ದು..?” ಕಣ್ಣಂಚಿನ ದುಃಖವನ್ನು ಒರೆಸಿ ಹೊರಗೆ ಬಂದಾಗ ಬೋಳು ಮರದಲ್ಲಿ ಕೂತ ಕಾಗೆಯೊಂದು ಪಟಪಟನೆ ರೆಕ್ಕೆ ಬಡಿಯುತ್ತ ಹನಿಗಳುದುರಿಸಿ ಹಾರಿಹೋಯಿತು…. ನಿರಾಳವಾಗಿ. —ಶೀಲಾ ಭಂಡಾರ್ಕರ್. ರಾಜಿನಾಮೊ ಪಿಕ್ಕಾಸ್ ಆನಿ ಖೊರೆಂ ನವ್ಯಾನ್ ಡ್ಯೂಟೆಕ್ ಹಾಜಿರ್ ಜಾಲಿಂ, ಫುಲಾ ತೊಟಾಂತ್. ಡ್ಯೂಟೆಕ್ ಲಾಗ್‍ಲ್ಲ್ಯಾ ಪಿಕ್ಕಾಸಾನ್ ಮೋವ್ ಆಸ್ಲೆಕಡೆ ಖೊಂಡುಂಕ್ ಸುರು ಕೆಲೆಂ ಖೊಂಡ್ಚ್ಯಾ ಹುಮೆದಿನ್ ಆಡ್ ಮೆಳ್‍ಲ್ಲೊ ಉದ್ಕಾ ಪೈಪ್‍ಯೀ ಉಕ್ಲುನ್ ಘಾಲೊ ದುಸ್ರೆದಿಸಾ ‘ಚತ್ರಾಯೆಸಂಗಿಂ’ ಪಿಕ್ಕಾಸಾಕ್ ಮುರೊ ಖೊಂಡುಂಕ್ ‘ಡ್ಯೂಟಿ’ ಘಾಲಿ, ಎಕೆಕ್ ಘಾಸಾಕೀ ದಾಂತಾಥಾವ್ನ್ ಕಿಟಾಳಾಂ ಉಸ್ಳೊನ್ ಹಿಂಸಾ ಜಾತಾಲಿ, ತಿತ್ಲ್ಯಾಕ್‍ಚ್ ಪಿಕ್ಕಾಸಾನ್ ‘ರಾಜಿನಾಮೊ’ ದಿಲೊ. ಪಿಕ್ಕಾಸಾನ್ ಖೊಂಡುನ್ ಗೆಲ್ಲೆಕಡೆ ಖೊರ್‍ಯಾಕ್ ಡ್ಯೂಟಿ ಲಾಗ್ಲಿ ಮಾತಿ ವೊಡ್ಚಿ, ಹದಾ ಕರ್‍ಚಿ ಮ್ಹೆಳೆಂ ಶೆಣ್ ವೊಡುನ್ ಘಾಲ್ಚೆಂ.. ತಿಕಾಯ್ ಹಿಂಸಾ ಜಾತಾಲಿ ತೆಂ ವಾತಾವರಣ್‍ಚ್ ನಾಕಾ ಆಸ್ಲೆಂ.. ತರೀ, ಆಪ್ಣಾಕುಶಿಕ್‍ಚ್ ಯೇವ್ನ್ ಪಡ್ಚ್ಯಾ ಮೆಳ್ಯಾಮದೆಂಯ್ ಖೊರೆಂ ರಾವ್ಲೆಂ, ‘ಗುಲೊಬಾಚ್ಯಾ ಪರ್ಮಳಾಕ್ ಲಾಲೆವ್ನ್’ ರಾಜಿನಾಮೆ ಹಾರೆ ಮತ್ತು ಗುದ್ದಲಿಗಳೆರಡೂ ಹೊಸದಾಗಿ ಡ್ಯೂಟಿಗೆ ಸೇರಿದವು ಹೂವಿನ ತೋಟದೊಳಗೆ. ಡ್ಯೂಟಿಯಲ್ಲಿ ತೊಡಗಿದ ಹಾರೆಯು ಮೆತ್ತಗಿರುವಲ್ಲಿ ಅಗೆಯಲು ಆರಂಭಿಸಿತು. ಅಗೆಯುವ ಹುಮ್ಮಸ್ಸಿನಲ್ಲಿ ಅಡ್ಡ ಬಂದ ನೀರಿನ ಪೈಪನ್ನೂ ಬಗೆದು ಹಾಕಿತು. ಮರುದಿನ ಮತ್ತೆ ಹಾರೆಗೆ ಎಚ್ಚರದಿಂದ ಕೆಲಸಮಾಡಲು ಎಚ್ಚರಿಸಿ ಕಲ್ಲಿರುವ ಕಡೆ ಅಗೆಯುವ ಡ್ಯೂಟಿ ಬಿತ್ತು. ಒಂದೊಂದು ತುತ್ತಿಗೊಂದೊಂದು ಕಿಡಿಗಳು ಹಲ್ಲಿನಿಂದ ಸಿಡಿಯುವಾಗ ಭಾರೀ ಹಿಂಸೆ ಅನಿಸಿತು. ಅಷ್ಟಕ್ಕೇ ಹಾರೆಯು ರಾಜಿನಾಮೆ ಕೊಟ್ಟಿತು. ಹಾರೆ ಅಗೆದು ಹೋಗಿದ್ದ ಕಡೆ ಈಗ ಗುದ್ದಲಿಯ ಡ್ಯೂಟಿ ಬಂತು. ಮಣ್ಣು ಅಗೆಯುವುದು ಹದಗೊಳಿಸುವುದು, ಸೆಗಣಿ ಹಾಕಿ ಮಟ್ಟ ಮಾಡುವುದು. ಅದಕ್ಕೂ ಹಿಂಸೆಯೇ ಇದು. ಈ ವಾತಾವರಣವೇ ಬೇಡ ಅನಿಸುತಿತ್ತು. ಆದರೂ.. ತನ್ನ ಬುಡಕ್ಕೆ ಬಂದು ಅಂಟುವ ಗಲೀಜಿನ ನಡುವೆಯೂ ಗುದ್ದಲಿ ಅಲ್ಲಿಯೇ ನಿಂತಿತ್ತು.. “ಗುಲಾಬಿಯ ಪರಿಮಳದ ಹಂಬಲದಿಂದ” ಕನ್ನಡಕ್ಕೆ: ಶೀಲಾ ಭಂಡಾರ್ಕರ್. ——————————————————— ಫೋಟೊ ಆಲ್ಬಂ ***************************************************************** ಚಿತ್ರ-ಬರಹ ಶೀಲಾ ಭಂಡಾರ್ಕರ್

ಕೊಂಕಣಿ ಕವಿ ಪರಿಚಯ Read Post »

ಇತರೆ

ಚಂಸು ಪಾಟೀಲ ಎಂಬ ‘ರೈತಕವಿ’

ಚಂಸು ಪಾಟೀಲ ಎಂಬ ‘ರೈತಕವಿ’ ಚಂಸು ಪಾಟೀಲ ಎಂಬ ‘ಪತ್ರಕರ್ತ’, ‘ರೈತಕವಿ’ಯೂ..!ಮತ್ತವನ ‘ಬೇಸಾಯದ ಕತಿ’ಯೂ.!! ನನ್ನ ಪ್ರೀತಿಯ ಗೆಳೆಯ ಚಂಸು ಪಾಟೀಲ ಮೊನ್ನೆ ಭೇಟಿಯಾಗಿದ್ದ ಹಾವೇರಿಯಲ್ಲಿ. ಚಂಸು ತನ್ನ ಇತ್ತೀಚಿನ ಪುಸ್ತಕವಾದ ‘ಬೇಸಾಯದ ಕತೆ’ ಓದಲು ನನಗೆ ಕೊಟ್ಟ. ನನಗೆ ಈ ‘ಬೇಸಾಯದ ಕತಿ’ ಓದುತ್ತಿದಂತೆ ಇದರ ಬಗೆಗೇನೆ ಒಂದು ಬರಹ ಮಾಡೋಣವೆನಿಸಿ ಒಂದು ಈ ಬರಹವನ್ನು ಮಾಡಿದೆ.ಈ ಚಂಸು ‘ರೈತಕವಿ’ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಆಗಿದೆ.ಅಷ್ಟೇ ಅಲ್ಲ ಈ ಚಂಸು ಪತ್ರಕರ್ತನೂ ಹೌದು. ಈ ಇವನ ಬಗೆಗಿನ ಮಾಹಿತಿ ಮತ್ತು ಬರಹ ಇಲ್ಲಿದೆ ನೋಡಿ… ಈ ಚಂಸುನು ಬೇಸಾಯದ ಬಗೆಗೆ ಲೇಖಕನಾಗಿ ದೂರದಿಂದ ಕಂಡು ಬರೆದಿಲ್ಲ. ಅದರ ಒಂದು ಭಾಗವಾಗಿಯೇ ಬರೆಯುತ್ತಾ ಹೋಗುತ್ತಾನೆ. ಸ್ವಯಂ ಕೃಷಿಗಿಳಿದಿರುವ ಈ ಚಂಸು ಬೇಸಾಯದ ಲಾಭ-ನಷ್ಟಗಳನ್ನು ಒಂದೆಡೆ ಹೇಳುತ್ತಾನೆ. ಹಾಗೆಯೇ ಕೃಷಿ ಬದುಕಿನ ಜೊತೆಗೆ ಸುತ್ತಿಕೊಂಡಿರುವ ಬೇರೆ ಬೇರೆ ಹಬ್ಬ, ಉತ್ಸವ ಇತ್ಯಾದಿಗಳನ್ನು ವಿವರಿಸುತ್ತಾನೆ. ಹಾಗೆಯೇ ಕೃಷಿಯ ಜೊತೆಗೆ ಅಂಟಿಕೊಂಡ ಸಂಬಂಧಗಳನ್ನೂ ತೆರದಿಡುವ ಪ್ರಯತ್ನ ಮಾಡುತ್ತಾನೆ. ಅಂದರೆ ಬೇಸಾಯದ ಬೇರೆ ಬೇರೆ ಮಗ್ಗುಲುಗಳು ಈ ಲೇಖಕನಿಂದ ಪರಿಚಯವಾಗುತ್ತಾ ಹೋಗುತ್ತದೆ. ಇದೇ ಸಂದರ್ಭದಲ್ಲಿ ನಾವಿಂದು ಯಾವ ಹಬ್ಬ ಹರಿದಿನ, ಉತ್ಸವಗಳನ್ನು ಆಚರಿಸುತ್ತಿದ್ದೇವೆಯೋ ಅವೆಲ್ಲವೂ ಬೇಸಾಯದಿಂದ ತನ್ನ ನಂಟನ್ನು ಕಳೆದುಕೊಂಡು ಸ್ವತಂತ್ರವಾಗುತ್ತಿರುವುದು, ಮತ್ತು ಕೃತಕ ಆಚರಣೆಯಾಗಿ‌ ಮುಂದುವರಿಯುತ್ತಿರುವುದನ್ನೂ ಈ ‘ಬೇಸಾಯದ ಕತಿ’ ಕೃತಿಯು ಚರ್ಚಿಸುತ್ತದೆ.ಶ್ರಾವಣದಿಂದ ಮಹಾನವಮಿಯವರೆಗಿನ ಹಬ್ಬಗಳಲ್ಲಿ ಮಣ್ಣನ್ನು ಪೂಜಿಸುವಂಥವೇ. ಮಣ್ಣೆತ್ತಿನ ಅಮವಾಸೆಗೆ ಮಣ್ಣೆತ್ತು ಮಾಡಿ ಪೂಜಿಸುವುದು. ನಾಗರ ಪಂಚಮಿಗೆ ಹುತ್ತಕ್ಕೆ ಹಾಲೆರೆಯುವುದು. ಗಣಪ ಕೂಡ ಮಣ್ಣೆ. ನಮ್ಮ ಅಡುಗೆ, ಉಡುಗೆ, ತೊಡುಗೆಗಳಿಗೆ ಬೇಕಾದ ಮೂಲ ಪದಾರ್ಥ, ಪರಿಕರಗಳನ್ನು ಒದಗಿಸುವ ಮಣ್ಣನ್ನು ಪೂಜಿಸುವ, ಮಣ್ಣಿನ ಋಣಕ್ಕೆ ಕೃತಜ್ಞತೆ ಸಲ್ಲಿಸುವ ಅರ್ಥಪೂರ್ಣ ಆಚರಣೆ. ಇಂತಹ ಹಲವು ಚಿಂತನೆಗಳು ಈ ಕೃತಿಯಲ್ಲಿದೆ… ಚಂಸು ಪಾಟೀಲ ಕೃಷಿಯನ್ನೇ ಜೀವನ ವಿಧಾನವಾಗಿ ಸ್ವೀಕರಿಸಿರುವ ಲೇಖಕ. ಚಂಸು ಪಾಟೀಲನು (ಚಂದ್ರಶೇಖರ ಸುಭಾಶಗೌಡ) ಮೂಲತಃ ರಾಣೇಬೆನ್ನೂರು ತಾಲೂಕಿನ ಕೂನಬೇವು (ಅಂಚೆ: ಕಜ್ಜರಿ) ಗ್ರಾಮದವನು. ಬಿ.ಎ. ಪದವೀಧರನು. ಕೆಲವು ಕಾಲ ನಾನು ಮೊದಲೇ ಹೇಳಿದಂತೆ ‘ಸಂಯುಕ್ತ ಕರ್ನಾಟಕ, ‘ಕ್ರಾಂತಿ’ ದಿನಪತ್ರಿಕೆಯಲ್ಲಿ ಹಾಗೂ ‘ನೋಟ’ ವಾರಪತ್ರಿಕೆಯಲ್ಲಿ ಸಹ ಸಂಪಾದಕರಾಗಿದ್ದವನು. ಕೃಷಿ ಸಮಸ್ಯೆ ಕುರಿತು ಬರೆದ ಕೃತಿಯಾದ ‘ಬೇಸಾಯದ ಕತಿ’ಯು ನನ್ನ ತೀರಾ ಮನಮುಟ್ಟಿದ ಕೃತಿಯಾಗಿದೆ. ಈ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ 2018 ರ ಸಾಲಿನ ಸಿಂಪಿ ಲಿಂಗಣ್ಣ ದತ್ತಿ ಪ್ರಶಸ್ತಿಯೂ ಲಭಿಸಿದೆ. ಇತನ ಇನ್ನುಳಿದ ಕೃತಿಗಳಾದ ‘ಗೆಳೆಯನಿಗೆ’ (1995), ‘ಕೆಂಪುಕಂಗಳ ಹಕ್ಕಿ ಮತ್ತದರ ಹಾಡು’ (2004), ‘ಅದಕ್ಕೇ ಇರಬೇಕು’ (2009) ಅಲ್ಲದೇ ಇವನ ಕವನ ಸಂಕಲನಗಳೂ ಓದಿಸಿಕೊಂಡು ಹೋಗುವ ಕೃತಿಗಳಾಗಿವೆ.ಪ್ರಸ್ತುತವಾಗಿ ಸದ್ಯ ತನ್ನ ಕುನಬೇವ ಗ್ರಾಮದಲ್ಲೇ ಕೃಷಿಕರಾಗಿನಾಗಿದ್ದಾನೆ. ಸ್ವಯಂ ರೈತಕವಿಯಾಗಿ ರೈತಾಪಿ ಜಗತ್ತಿನ ಕೃಷಿ ಜಾಗೃತಿಯಲ್ಲಿ ತೊಡಗಿಕೊಂಡಿದ್ದಾನೆ. ಇರಲಿ ಈಗ ಇವನ ಅತ್ಯುತ್ತಮ ಕೃತಿಯಾದ ಅಲ್ಲದೇ ನನಗೆ ತೀರಾ ಹಿಡಿಸಿದ ಕೃತಿಯಾದ ‘ಬೇಸಾಯದ ಕತಿ’ ಬಗೆಗೆ ನೋಡೋಣ… ‘ಬೇಸಾಯದ ಕತಿ’… ಚಂಸು ಪಾಟೀಲ ಎಂಬ ಯುವ ಲೇಖಕನ ತವಕ ತಲ್ಲಣಗಳ ಲೇಖನ ಸಂಗ್ರಹವಿದು ‘ಬೇಸಾಯದ ಕತಿ’. ಬಾಲಕನಾಗಿದ್ದಾಗ ಶಾಲೆಯಲ್ಲಿ ಇದ್ದಾಗಲೇ ಕವಿತೆ ಬರೆದ ಪಾಟೀಲ ಎಂಬತ್ತು-ತೊಂಬತ್ತರ ದಶಕದಲ್ಲಿ ಕನ್ನಡದ ಪ್ರಮುಖ ಬರಹಗಾರರನ್ನು ಓದಿ ಕೊಂಡಿದ್ದ ಕವಿ ಹೃದಯಿಗೆ ತಮ್ಮ ತಂದೆ ಆಧುನಿಕ ಕೃಷಿ ಪದ್ದತಿಯಿಂದ ಸಾಲದ ಸುಳಿಯಲ್ಲಿ ಬಿದ್ದು ವಿಲವಿಲ ಒದ್ದಾಡುವುದು ಕಂಡು ತಲ್ಲಣಿಸಿ ಹೋಗುತ್ತಾನೆ. ತನ್ನಜ್ಜನ ಪಾರಂಪರಿಕ(ಕೃಷಿ) ಕಮತದಿಂದ ನಿರುಮ್ಮಳವಾಗಿದ್ದು ಕಂಡ ಈ ತರುಣನಿಗೆ ತಾನು ಪಾರಂಪರಿಕ ಕಮತಕ್ಕೆ ಇಳಿದು ತನ್ನಪ್ಪನನ್ನು ಸಾಲದ ಸುಳಿಯಿಂದ ಹೊರತರಲು ಯತ್ನಿಸುತ್ತಾನೆ. ಇನ್ನು ಓದು ಓದಿಸುವೆ ಯಾವುದಾದರೂ ಕೆಲಸ ಹಿಡಿದು ಸುಖವಾಗಿರು ಎನ್ನುವ ತಂದೆ..!ಆದರೆ ನಿರಂತರ ಪರಿಶ್ರಮ, ಪ್ರಯತ್ನ ಮತ್ತು ಅಚಲವಾದ ಆತ್ಮವಿಶ್ವಾಸವೇ ಕೃಷಿ, ಇಂಥ ಕೃಷಿಯಿಂದಲೇ ಮೊದಲಾದದ್ದು ನಾಗರೀಕತೆ, ಸಂಸ್ಕೃತಿ ಇತ್ಯಾದಿ, ಹಾಗಾಗಿಯೇ ಕೃಷಿಗೂ ಸಂಸ್ಕೃತಿಗೂ ಅವಿನಾಭಾವ ಸಂಬಂಧವಿದೆವೆನ್ನುವ ಚಂಸು. ಕೃಷಿ ಹೊರತುಪಡಿಸಿದ ಸಂಸ್ಕೃತಿ ಪ್ರೇತವೆನ್ನುವ ಚಂಸುನು ಕೃಷಿಯಲ್ಲೇ ಉಜ್ವಲ ಮತ್ತು ಅರ್ಥಪೂರ್ಣ ಬದುಕು ಕಾಣಲು ಹಂಬಲಿಸಿ ಆ ಪ್ರಯತ್ನದಲ್ಲಿ ಸಫಲನೂ ಆಗುತ್ತಾನೆ..! ಸಂಸ್ಕೃತಿಯನ್ನು ಹೊರತುಪಡಿಸಿದ ಕೃಷಿ ಹೆಣಭಾರವೆನ್ನುವ ರೈತಕವಿ ಚಂಸು..! ಅಂದಂತೆಯೇಈಗ ಆಗಿರುವುದು ಹೀಗೆಯೇ.ಇಪ್ಪತ್ತು ವರ್ಷಗಳ ಹಿಂದೆ ಹೋದರೆ ಆಗ ಕೃಷಿ ಮತ್ತು ಸಂಸ್ಕೃತಿ ಯ ಸಂಬಂಧ ಅವಿನಾಭಾವ ಬಂಧವಿತ್ತು. ಅಲ್ಲಿಂದೀಚೆಗೆ ಇವೆರಡೂ ಪರಸ್ಪರ ವಿರುದ್ಧ ದಿಕ್ಕಿನತ್ತಲೇ ಸಾಗಿವೆ, ಈ ವೈರುಧ್ಯದ ಬದುಕೆ ಇವತ್ತು ನಮ್ಮ ರೈತರನ್ನು ಅಸಹಾಯಕರನ್ನಾಗಿಸಿದೆ. ಇನ್ನಿಲ್ಲದಷ್ಟು ಹತಾಶರನ್ನಾಗಿಸಿದೆ. ಶ್ರಾವಣದಿಂದ ಮಹಾನವಮಿವರಿಗಿನ ಹಬ್ಬಗಳೆಲ್ಲ ಮಣ್ಣನ್ನು ಪೂಜಿಸುವಂಥವೇ. ಮಣ್ಣೆತ್ತಿನ ಅಮಾವಾಸ್ಯೆಗೆ ಮಣ್ಣೆತ್ತು ಮಾಡಿ ಪೂಜಿಸುವುದು. ನಾಗರ ಪಂಚಮಿಗೆ ಹುತ್ತಕ್ಕೆ ಹಾಲೆರೆಯುವುದು. ಗಣಪ ಕೂಡಾ ಮಣ್ಣೆ..! ಇದು ಉಂಡುಟ್ಟು ಸಂಭ್ರಮಿಸಲಿಕ್ಕೇ ಮಾತ್ರ ಬೆಳೆದುಬಂದ ಪರಂಪರೆಯಲ್ಲ. ನಮ್ಮ ಅಡುಗೆ, ಉಡುಗೆ, ತೊಡುಗೆಗಳಿಗೆ ಬೇಕಾದ ಮೂಲ ಪದಾರ್ಥ..! ಪರಿಕರಗಳನ್ನು ಒದಗಿಸುವ ಮಣ್ಣನ್ನು ಪೂಜಿಸುವ, ಮಣ್ಣಿನ ಋಣಕ್ಕೆ ಕೃತಜ್ಞತೆ ಸಲ್ಲಿಸುವ ಅರ್ಥಪೂರ್ಣ ಆಚರಣೆ. ಈ ಆಚರಣೆಗಳನ್ನು ಬಿಟ್ಟಿಲ್ಲ. ಆದರೆ, ಇಂದು ನಂಬಿಕೆಗಳಿಗೆ ಮಣ್ಣು ಕೊಟ್ಟಿದ್ದವೆಂದು ‘ಬೇಸಾಯದ ಕತಿ’ಯಲ್ಲಿ ಹೇಳುವ ಚಂಸು ಒಬ್ಬ ಮಣ್ಣಿನ ಆರಾಧಕ, ರೈತಕವಿ ಅಂತಲೇ ನನ್ನ ಅಭಿಪ್ರಾಯ ಮಾತ್ರವಲ್ಲ ಈತನನ್ನು ತೀರ ಹತ್ತಿರದಿಂದ ಕಂಡ ಬಹು ಜನರ ಅನುಭವವೂ ಆಗಿದೆ. ಇನ್ನು ಮಣ್ಣಿನ ಸಂಸ್ಕೃತಿಯಿಂದ ದೂರ ಹೋಗಿರುವ ನಗರ ಪಟ್ಟಣಗಳಲ್ಲಿ ಈ ಹಬ್ಬಗಳು ಇನ್ನೂ ವಿಜೃಂಭಣೆಯಿಂದ, ವೈಭವದಿಂದ ಜರಗುವುದನ್ನು ನೋಡಿದರೆ ಇದೆಲ್ಲ ಹಾಸ್ಯಾಸ್ಪದ ಎನ್ನಿಸುತ್ತದೆ. ನಾವು ಇವತ್ತು ಮಾಡುವುದು ಸರಿ ಎಂದಿಟ್ಟುಕೊಳ್ಳೋಣ. ಮತ್ತೇಕೆ ಬೇಕು ನಮ್ಮೀ ಮಣ್ಣಿನ ದೇವರಿಗೆ ಹೋಳಿಗೆ. ಕಡುಬು ಪಾಯಸ..? ಎಂದು ಕೇಳುವ ಚಂಸು ಅವರಿಗೂ ಮೊನೋಕ್ರೋಟೋಫಾಸೋ, ಇಮಿಡಾಕ್ಲೋರಿಫೈಡೋ, ಯೂರಿಯಾವನ್ನೊ, ಡಿಎಪಿಯನ್ನೋ ನೈವೇದ್ಯವಾಗಿ ಅರ್ಪಸಬಹುದಲ್ಲವೆಂದು ಕೇಳುತ್ತಾನೆ..! ಹೀಗೆ ಕೇಳುವ ಈತನ ಪ್ರಶ್ನೆ ನಿಜಕ್ಕೂ ವಾಸ್ತವವಾದ ಪ್ರಾಕೃತಿಕ ಬದುಕಿನ ಪ್ರಶ್ನೆಯೇ ಆಗಿದೆ. ಇಷ್ಟೆಲ್ಲಾ ತಿಳುವಳಿಕೆ ಇರುವ ವ್ಯಕ್ತಿಗೇ ದಳ್ಳಾಳಿಗಳು ಮೋಸ ಮಾಡುತ್ತಾರೆ ಅಂದರೆ ನೀವು ನಂಬಲಿಕ್ಕಿಲ್ಲ!ಆ ಮೋಸಗಾರನಿಗೆ ಮೆಟ್ಟಿನಲ್ಲಿ ಹೊಡೆದು. ಪಟ್ಟಭದ್ರ ಹಿತಾಸಕ್ತಿಗಳ ನ್ಯಾಯ ಪಂಚಾಯಿತಿಯಲ್ಲಿ ಚಂಸು ಪಾಟೀಲನು ಗೆದ್ದು ಎದ್ದು ಬಂದಿದ್ದ ರೋಮಾಂಚಮಕಾರಿ ಅಧ್ಯಾಯವನ್ನು ನೀವು ಈ ‘ಬೇಸಾಯದ ಕತಿ’ ಕೃತಿಯನ್ನು ಓದಿಯೇ ತಿಳಿಯಬೇಕು. ಹಸಿರು ಕ್ರಾಂತಿ ನಮ್ಮ ಕೃಷಿಯನ್ನು ಮಾತ್ರ ಬದಲಿಸಿಲ್ಲ. ನಮ್ಮ ಆಚಾರ-ವಿಚಾರಗಳನ್ನು ಬದಲಿಸಿದೆ. ನಮ್ಮ ಬದುಕಿನ ನಂಬಿಕೆಗಳನ್ನು ನಮಗರಿವಿಲ್ಲದಂತೆಯೇ ಬುಡಮೇಲು ಮಾಡಿದೆ. ಈ ದ್ವಂದ್ವದ ಬದುಕು. ಆಧುನಿಕತೆಯ ಅತೀ ವ್ಯಾಮೋಹವೇಯಾಗಿದೆ. ಲಾಭ ಬಡುಕರ ಲಗಾಮಿನಲ್ಲಿ ಓಡುತ್ತಿರುವ ತಂತ್ರಜ್ಞಾನದ ಸುಳಿಯಲ್ಲಿ ನಾವು ನಮ್ಮತನವನ್ನು ಕಳೆದುಕೊಂಡಿದ್ದೆವೆಂದು ಪರಿತಪಿಸುವ ಚಂಸು ನಾವು ಹಬ್ಬಕ್ಕೆ ತಂದ ಹರಿಕೆಯ ಕುರಿಗಳಾಗಿದ್ದೆವೆಂದೇ ಪರಿತಪಿಸುತ್ತಾನೆ.ಮತ್ತೆ ಮತ್ತೆ ಮಾರ್ಕೆಟ್‌ ನ ತಳಿರಿಗೆ ಹಾತೊರೆಯುತ್ತಲೇ ಇದ್ದವೆಂದು ಗೋಳಿಡುತ್ತಾನೆ. ರೋಹಿಣಿ ಅಥವಾ ಮೃಗಶಿರಾ ಮಳೆ ಆಯಿತೆಂದರೆ ಮೆಣಸಿನ ಅಗಿ ಹಚ್ಚುವ ಹೊಲಕ್ಕೆ ಈರುಳ್ಳಿ ಚೆಲ್ಲಿ ಎರಡು ಎರಡೂವರೆ ಅಡಿ ಅಂತರದಲಿ ಸಾಲು ಎಬ್ಬಿಸುತ್ತಿದ್ದರು. ಅರಿದ್ರಾ ಮಳೆ ಬರುವಷ್ಟರಲ್ಲಿ ಎರಡು ದೊಡ್ಡ ಮಳೆ ಬಂದಿರೋದು ಭೂಮಿಯೂ ತಂಪಾಗಿ ವಾತಾವರಣದಲ್ಲಿ ತಂಪು ಸೂಸುತ್ತಿರುವ ಸಮಯವದು. ಜುಲೈ ತಿಂಗಳಿಗೆ ಆಗಲೇ ಮುಂಗಾರು ಆರಂಭವಾಗಿ ಪೂರ್ವಾಭಿಮುಖವಾಗಿ ಚಲಿಸುವ ನೈರುತ್ಯ ಮಾರುತದ ಮೋಡಗಳ ಪರಿಣಾಮ ದಿನಗಳಲ್ಲಿ ಆಗಾಗ ಮಳೆ ಸೆಳಕುಗಳು ಓಡಾಡುತ್ತಲೇ ಇರುತ್ತಿದ್ದವು. ಗಿಡ ಹಚ್ಚಲು ಇದು ಸೂಕ್ತ ಕಾಲ. ‘ಆದ್ರಿ ಮಳೆಗೆ ಹಚ್ಚಿದರೆ ಆರು ಕಾಯಿ ಹೆಚ್ಚು’ ಎಂಬ ಗಾದೇನೇ ಇದೆ .ಅರಿದ್ರಾ ಮಳೆ ಶುರುವಾಗುತ್ತಲೆ ಈರುಳ್ಳಿ ಚೆಲ್ಲಿದ ಹೊಲಕ್ಕೆ ಮೆಣಸಿನ ಕಾಯಿ ಅಗಿ ಹಚ್ಚುತ್ತಿದ್ದರು ಆಗ ಮತ್ತೇ ಆ ಹೊಲಕ್ಕೆ ಹುಬ್ಬಿ ಮಳೆ ಬಂದಾಗ ಸಣ್ಣ ಹತ್ತಿ ಅಂದರೆ ನಮ್ಮ ದೇಸಿ ಜೈಧರ ಹತ್ತಿ ಬೀಜ ಊರುತ್ತಿದ್ದರು. ಹೀಗೆ ಒಂದೇ ಹೊಲದಲ್ಲಿ ಬೇರೆ ಬೇರೆ ಕಾಲಮಾನಕ್ಕೆ ಮತ್ತು ಹವಾಮಾನಕ್ಕೆ ಬೆಳೆವ ಪ್ರಮುಖ ಮೂರು ಬೆಳೆಗಳನ್ನು ಅವರು ಅಂದರೆ ನಮ್ಮ ಹಿರಿಕರು ಬೆಳೆಯುತ್ತಿದ್ದರು. ಈಗ ಹೈಬ್ರಿಡ್ ಬಂದು ಮಿಶ್ರ ಬೆಳೆ ಹಾಳಾಯಿತು. ಹೈಬ್ರಿಡ್ ಹಾಗೂ ಬಿಟಿ ಬಂದ ಮೇಲೆ ಈ ಅಪೂರ್ವವಾದಂತಹ ಮಿಶ್ರ ಬೆಳೆ ಪದ್ದತಿಯೇ ಮೂಲೆಗುಂಪಾಯಿತು. ಏಕಬೆಳೆ ಪದ್ದತಿಯೇ ಸಾರ್ವಭೌಮವಾಯಿತು. ಬಂದರೆ ಸರಿ ಇಲ್ಲದಿದ್ದರೆ ಬರೆ ಬೀಳುವುದೂ ಸಾಮಾನ್ಯವಾಯಿತು ಎಂದು ರೈತಕವಿ ಚಂಸು ಪರಿತಪಿಸುತ್ತಾನೆ. ನಲವತ್ತು ವರ್ಷಗಳ ಹಿಂದೆ ಸುರುವಾದ ಬಾವಿ ನೀರಾವರಿಯ ಸಂದರ್ಭದಲ್ಲಿಯೇ ಹಸಿರು ಕ್ರಾಂತಿಯ ಘೋಷಣೆ ಮೊಳಗಿತು. ಆಗ ನನ್ನೂರಲ್ಲಿ ಸುಮಾರು ಇಪ್ಪತ್ತು-ಇಪ್ಪತ್ತೈದು ಬಾವಿಗಳಿದ್ದವು. ಆರಂಭದಲ್ಲಿ ಬಾವಿ ತುಂಬ ನೀರು ಇರುತ್ತಿತ್ತು. ಹಗಲಿಡೀ ವಿದ್ಯುತ್ ಇರುತ್ತಿತ್ತು. ಹೊಲಗಳೆಲ್ಲ ಹಸಿರಿನಿಂದ ಕಂಗೊಳಿಸುತ್ತಿದ್ದವು. ಸಂಜೆಗೆ ಬಾವಿ ಖಾಲಿಯಾದರೂ ಬೆಳಕು ಹರಿಯುವಷ್ಟರಲ್ಲಿ ಬಾವಿಗಳು ತುಂಬಿಕೊಳ್ಳುತ್ತಿದ್ದವುವೆನ್ನುವ ಚಂಸುನ ಈ ಮಾತು ಬರೀ ಚಂಸು ಊರಿಗೆ ಮಾತ್ರ ಸೀಮಿತವಾಗಿಲ್ಲ. ಕೃಷಿವೆನ್ನುದು ಎಲ್ಲಿದೆಯೋ ಅಲ್ಲಲ್ಲಿಲ್ಲೆಲ್ಲಾ ಸಂಬಂಧಿಸಿದ್ದೇಯಾಗಿದೆ. ಹಸಿರು ಕ್ರಾಂತಿ ಅಥವಾ ಆಧುನಿಕ ಕೃಷಿ ಅಮೇರಿಕೆಯ ಕುರುಡು ಅನುಕರಣೆಯೇ ಹೊರತು ಅದರಲ್ಲಿ ಬೇರೆ ಹುರುಳಿಲ್ಲ ಎಂಬುವುದ್ದಕ್ಕೆ ಇವತ್ತು ಪ್ರತಿ ದಿನವೂ ಸಂಭವಿಸುತ್ತಿರುವ ರೈತರ ಆತ್ಮಹತ್ಯೆಗಳೇ ಸಾಕ್ಷಿ. ಹಸಿರು ಕ್ರಾಂತಿಯನ್ನು ಜಾರಿಗೊಳಿಸುವಾಗ ಆದನ್ನು ಕನಿಷ್ಟ ನಮ್ಮತನಕ್ಕೆ ಹಾಗೂ ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಹೇಗೆ ಕಾರ್ಯಗತಗೊಳಿಸಬಹುದೆಂಬ ಕುರಿತು ಯೋಚಿಸಿ ಬೇಕಿತ್ತು.ಸಾವಿರ ಶತಮಾನಗಳ ಕೃಷಿ ಪರಂಪರೆಯ ನಾಡು ನಮ್ಮದು ಎಂಬ ಸಂಗತಿಯಾದರೂ ನೆನಪಿಗೆ ಬರಬೇಕಿತ್ತು. ಪರಿಸರ ನೈರ್ಮಲ್ಯ. ಜಲ ಸಂರಕ್ಷಣೆ. ಅರಣ್ಯ ರಕ್ಷಣೆಯ ಜೊತೆ ಜೊತೆಗೇನೇ ಕೃಷಿಯಲ್ಲಿ ಹೆಚ್ಚು ಇಳುವರಿಯ ಪಡೆಯುವ ಸಾದ್ಯತೆಗಳನ್ನು ಕಂಡುಕೊಳ್ಳಬಹುದಿತ್ತು. ಇವತ್ತು ದೇಶಕ್ಕೆ ಆಹಾರಭದ್ರತೆ ಇದೆ, ಆದರೆ ಅದನ್ನು ಬೆಳೆದು ಕೊಟ್ಟ ಕೃಷಿಕರ ಜೀವಕ್ಕೆ, ಜೀವನಕ್ಕೆ ಬೆಲೆ ಇಲ್ಲ ಅಂದ್ರೆ ಏನು ಅರ್ಥ? ಒಂದು ದೇಶ. ಅಲ್ಲಿನ ಸರ್ಕಾರ ಮತ್ತು ಆ ಸಮುದಾಯದ ಕೃತಘ್ನತೆಯ ವಿರಾಟ್ ಸ್ವರೂಪವಲ್ಲದೇ ಇದು ಮತ್ತೇನು..? ಎಂದು ಚಂಸು ಪಶ್ನಿಸುತ್ತಿರುವುದು ಸಕಾಲಿಕ ಸತ್ಯವೇ ಆಗಿದೆ. ಫುಕುವೋಕಾರ ‘ಒಂದು ಹುಲ್ಲಿನ ಕ್ರಾಂತಿ’ ಪ್ರಕಟವಾಗಿದ್ದು 1975ರಲ್ಲಿ. ಅದು ಕನ್ನಡಕ್ಕೆ ಬಂದಿದ್ದು 1988ರಲ್ಲಿ. ಫುಕುವೋಕಾ ಸಹಜ ಕೃಷಿಯ ಬಗ್ಗೆ ಮಾತಾಡಿ ೪೦ ವರ್ಷಗಳಾದವು. ಈ ನಲವತ್ತು ವರ್ಷಗಳ ನಂತರವೂ ನಾವು ಆಧುನಿಕ ಕೃಷಿಯನ್ನೇ ಅನಿವಾರ್ಯ ಎಂದುಕೊಂಡು, ಪ್ರಕೃತಿಗೆ ಮಾರಕವಾದ ಅದನ್ನೇ ಮುಂದುವರಿಸಿಕೊಂಡು ಹೊರಟಿದ್ದೇವೆ. ಇದು ಇರುಳು ಕಂಡ ಬಾವಿಗೆ ಹಗಲು ಬಿದ್ದರೆಂಬ ಗಾದೆಯನ್ನು ನೆನಪಿಸುವಂತದಾಗಿದೆ. ಇವತ್ತಿನ ಕೃಷಿಯಲ್ಲಿ ಕಾರ್ಮಿಕರ ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿದೆ. ಬಹುಶಃ ಸರ್ಕಾರದ ಉದ್ದೇಶವೂ ಇದೆ ಎಂದು ಹೇಳಲಾಗುತ್ತಿದೆ. ಕಾರ್ಪೊರೇಟ್ ವಲಯದ ನಿಯಂತ್ರಣಕ್ಕೆ ಬರುವ ರೀತಿಯಲ್ಲಿ ಕೃಷಿಯನ್ನು ಬಗ್ಗಿಸಲಾಗುತ್ತಿದೆ. ಅಥವಾ ಹಿಗ್ಗಿಸಲಾಗುತ್ತಿದೆ. ಸಂಪೂರ್ಣ ಯಾಂತ್ರೀಕರಣದ ನಂತರ ಕೃಷಿಯಲ್ಲಿ ಪಾಲ್ಗೊಳ್ಳುವ ಜನಸಂಖ್ಯೆಯನ್ನು ಶೇ 25 ರೊಳಗೆ ತರುವ ಪ್ರಯತ್ನಗಳ ಕುರಿತ ವರದಿಗಳಿವೆ. ಕೃಷಿಯಿಂದ ಹೊರಬಂದ ಶೇ 40ಕ್ಕೂ ಹೆಚ್ಚು ಜನರಿಗೆ ಬೇರೆ ಬೇರೆ ವಲಯಗಳಲ್ಲಿ ಸ್ಥಿರವಾದ ಉದ್ಯೋಗಗಳ ಲಭ್ಯತೆ ಸಾದ್ಯವೆ..? ಎಂದು ಚಂಸು ಪ್ರಶ್ನಿಸುತ್ತಾನೆ. ಆಗ ಊಟದ ವೇಳೆ ಎಂದರೆ ಹಿಂದಿ ವಾರ್ತಾ ಸುರುವಾಗುವ ಸಮಯ. ಅಲ್ಲಿಗೆ ರೇಡಿಯೋ ಬಂದ್ ಮಾಡಿ ಉಂಡು ಮಲಗಿಬಿಡುತ್ತಿದ್ದೆವು.ಟಿವಿ ಬಂದ ಮೇಲೆ ಅಪ್ಪ ಅವರಿವರ ಮನೆಗೆ ಹೋಗುವುದನ್ನು ನಿಲ್ಲಿಸಿಬಿಟ್ಟ. ಯಾರಾದರೂ ಮನೆಗೆ ಬಂದರೆ ಹಾಂ ಹೂಂ ಅಷ್ಟೇ ಮಾತುಕತೆ. ಎಲ್ಲರ ಕಣ್ಣು, ಮನಸು ಟಿವಿ

ಚಂಸು ಪಾಟೀಲ ಎಂಬ ‘ರೈತಕವಿ’ Read Post »

ಇತರೆ

ಕಸಾಪಗೆ ಮಹಿಳಾ ಅಧ್ಯಕ್ಷರು

ಕಸಾಪಗೆ ಮಹಿಳಾ ಅಧ್ಯಕ್ಷರು ಒಂದು ಚರ್ಚೆ ಇವತ್ತಿನ ಚರ್ಚೆಯಲ್ಲಿಅನಿಸಿಕೆ ತಿಳಿಸಿರುವವರು ಸುಧಾ ಆಡುಕಳ ಕ. ಸಾ. ಪ. ಕ್ಕೆ ,ಮಹಿಳಾ ಅಧ್ಯಕ್ಷರು ಯಾಕಿಲ್ಲ!!? ಕ. ಸಾ. ಪ. ಕ್ಕೆ ,       ಮಹಿಳಾ ಅಧ್ಯಕ್ಷರು ಯಾಕಿಲ್ಲ!!? ಸ್ಥಾಪನೆಯಾಗಿ ಶತಮಾನಗಳಾದರೂ ಇನ್ನೂ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ!?          ಇಂಥದೊಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ಚರ್ಚೆಯನ್ನಾರಂಭಿಸಿದ ಸಂಗಾತಿ ಪತ್ರಿಕೆಯ ನಿಲುವನ್ನು ತುಂಬು ಹೃದಯದಿಂದ ವಂದಿಸುತ್ತಲೇ, ನನ್ನ ಕೆಲವು ವಿಚಾರಗಳನ್ನು ಸ್ಪಷ್ಟಗೊಳಿಸಬಯಸುತ್ತೇನೆ. ಸಮಾನತೆಯೆಂಬುದು ಸುಲಭವಾಗಿ ರೂಢಿಸಿಕೊಳ್ಳುವ ವಿಷಯವಾಗಿದ್ದರೆ ಮಾನವ ಜನಾಂಗ ನಾಗರಿಕತೆಯ ಉತ್ಕೃಷ್ಟ ಹಂತವನ್ನು ತಲುಪಿದ ಇಂದಿನ ದಿನಗಳಲ್ಲಿಯೂ ಅಸಮಾನತೆಯ ಭಾರದಿಂದ ಕುಸಿಯುತ್ತಿರಲಿಲ್ಲ. ದಿನನಿತ್ಯದ ಸಣ್ಣಪುಟ್ಟ ಅವಕಾಶಗಳಲ್ಲೆಲ್ಲ ಸಮಾನತೆಯನ್ನು ಪ್ರತಿಪಾದಿಸುತ್ತ ಅದನ್ನು ಸಾಧಿಸಿಯೇ ಬಿಟ್ಟೆವು ಎಂಬ ಭ್ರಮೆಯಲ್ಲಿ ತೇಲಾಡಿಸುವುದು ಅಸಮಾನತೆಯ ಲೋಕರೂಢಿಯೇ ಆಗಿದೆ.        ನಿಜವಾದ ಸಮಾನತೆಯ ಪರೀಕ್ಷೆಯಾಗಬೇಕಾದದ್ದು ಅಧಿಕಾರದ ಹಂಚಿಕೆಯ ವಿಷಯದಲ್ಲಿ ಎಂಬುದನ್ನು ಉಪಾಯವಾಗಿ ಮರೆಮಾಚುತ್ತಾ ಅಥವಾ ಅದಕ್ಕೆ ತನ್ನದೇ ಅನೇಕ ಸಮಜಾಯಿಸಿಗಳನ್ನು ನೀಡುತ್ತಾ ಹೋಗುವುದು ಅನೂಚಾನವಾಗಿ ನಮ್ಮ ಸಮಾಜದ ನಡೆಯೇಆಗಿದೆ.       ಯಾವುದೇ ಅಧಿಕಾರಯುತವಾದ ಹುದ್ದೆಯ ಆಯ್ಕೆ ಚುನಾವಣಾ ರಾಜಕೀಯಕ್ಕಿಂತ ಭಿನ್ನವೇನಲ್ಲ. ಗ್ರಾಮ ಪಂಚಾಯಿತಿಯಲ್ಲಿ ಹೆಣ್ಣು ಮಕ್ಕಳಿಗೆ ಮೀಸಲಾತಿ ನೀಡಲು ತೆರೆದ ಮನಸ್ಸನ್ನು ಹೊಂದಿರುವ ವ್ಯವಸ್ಥೆ ಶಾಸಕ ಮತ್ತು ಸಂಸದರನ್ನು ಆಯ್ಕೆ ಮಾಡುವಾಗ ತೋರುವ ಅಸಮಾನತೆಯನ್ನು ಗಮನಕ್ಕೆ ತಂದುಕೊಂಡರೆಸಾಕು, ನಮ್ಮ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರ ದೊರಕುತ್ತದೆ. ಜಾತಿತಾರತಮ್ಯವನ್ನು ಅಳಿಸಿಬಿಟ್ಟಿದ್ದೇವೆಂದು ಭಾಷಣಮಾಡುತ್ತ, ಮನೆಗೆ ಬಂದವರಿಗೆ ತಮ್ಮದೇ ಪಕ್ಕದಲ್ಲಿ ಊಟವಿಕ್ಕುವ ಮಂದಿ ಮಕ್ಕಳ ಮದುವೆಯ ವಿಚಾರಕ್ಕೆ ಬಂದಾಗ ನಡೆದುಕೊಳ್ಳುವ ರೀತಿಯನ್ನು ಗಮನಿಸದರೂ ಸಾಕು. ಇವೆಲ್ಲವೂ ಸಮಾನತೆಯೊಳಗಿನ ಪೊಳ್ಳುತನವನ್ನು ಬಯಲಿಗೆಳೆಯುತ್ತಲೇ ಇರುತ್ತವೆ. ಸಮಾಜದಲ್ಲಿ ಪುರುಷ ಪ್ರಾಧಾನ್ಯವು ಅಳಿದು ಸಮಾನತೆಯ ತಂಗಾಳಿ ಬೀಸುತ್ತಿದೆ ಎಂಬ ಭ್ರಮೆಯಲ್ಲಿರುವ ನಮಗೆ ಅಧಿಕಾರದ ಪ್ರಶ್ನೆಗಳು ಬಂದಾಗಲೆಲ್ಲ ವಾಸ್ತವದ ಬಿಸಿಧಗೆ ಸೋಕುತ್ತಲೇ ಇರುತ್ತದೆ. ಆದರೆ ಇದು ನಮ್ಮ ದೇಶಕ್ಕೋ ಅಥವಾ ಒಂದು ಲಿಂಗಕ್ಕೋ ಸೀಮಿತವಾದ ವಿಷಯವೆಂದು ಅನಿಸುತ್ತಿಲ್ಲ. ಪ್ರಮಾಣದಲ್ಲಿ ಹೆಚ್ಚು ಕಡಿಮೆಯಿದ್ದರೂ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಸ್ರ್ತೀಯರು ಇಡಿಯ ಪ್ರಪಂಚದಲ್ಲಿ ಪಡೆದಿರುವ ಅಧಿಕಾರಯುತ ವಾದಸ್ಥಾನವನ್ನು ಲೆಕ್ಕ ಹಾಕಿದರೆ ನಾಚಿಕೆಯಿಂದ ತಲೆತಗ್ಗಿಸುವಂತಾಗುತ್ತದೆ. ರಾಹುಲಸಾಂಕೃತ್ಯಾಯನರವೋಲ್ಗಾ-ಗಂಗಾ ದಂತಹ ಪುಸ್ತಕವನ್ನು ಓದಿದರೆ ಅಧಿಕಾರದ ಹಂಬಲಕ್ಕಾಗಿ ತಾಯಿಯನ್ನೇ ಪ್ರವಾಹಕ್ಕೆ ದೂಡುವ ನಿಶೆಯರನ್ನು ಕಾಣುತ್ತೇವೆ ಮತ್ತು ಸಂತಾನೋತ್ಪತ್ತಿಯ ಕಾರಣಕ್ಕಾಗಿಯೇ ಇಡಿಯ ಗಣದ ಮುಖ್ಯಸ್ಥಳಾಗಿರುವ ಹೆಣ್ಣನ್ನು ಅವಳ ಆ  ಶಕ್ತಿಯನ್ನೇ ನಿಧಾನವಾಗಿ ದೌರ್ಬಲ್ಯವಾಗಿಸಿ ಮನೆಯ ಗೋಡೆಗಳ ನಡುವೆ ಬಂಧಿಸಿದ ಚರಿತ್ರೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಇಷ್ಟೆಲ್ಲವನ್ನು ಯಾಕೆ ಪ್ರಸ್ತಾಪಿಸಿದೆನೆಂದರೆ ಈ ಶಕ್ತಿರಾಜಕೀಯ ಎಂಬುದು ದೇಶ, ಕಾಲಗಳನ್ನು ಮೀರಿ ಸಮಾಜಕ್ಕೆ ಹಿಡಿದ ವ್ಯಾಧಿಯಾಗಿದೆ, ಎಂಬುದನ್ನು ತಿಳಿಸುವಕಾರಣಕ್ಕಾಗಿ ಅಷ್ಟೆ.           ಯಾರೇನೇ  ಹೇಳಿದರೂ ಹೆಣ್ಣು ಎಂಬ ಗೋಡೆಯೊಳಗಿನ ಜೀವ ಒಂಚೂರು ತನ್ನದೇ ಸಮಯವೆಂಬ ಬಿಡುವನ್ನು ಕಂಡುಕೊಂಡದ್ದು ವಿಜ್ಞಾನದ ಆವಿಷ್ಕಾರಗಳಿಂದಾಗಿ ಹುಟ್ಟಿಕೊಂಡ, ದೈನಂದಿನ ಕೆಲಸಗಳನ್ನು ಸುಲಭಗೊಳಿಸುವ ಅನೇಕ ಯಂತ್ರಗಳಿಂದ ಮಾತ್ರ. ಇಲ್ಲವಾದಲ್ಲಿ ಎಂಥಹ ಶಿಕ್ಷಣವೂ ಅವಳನ್ನು ಸಾಹಿತ್ಯ ರಚನೆಯೆಡೆಗೆ ಸೆಳೆಯುತ್ತಿತ್ತೆಂದು ನನಗನಿಸುತ್ತಿಲ್ಲ. ಹಾಗೆ ಸಿಕ್ಕಿದ ಬಿಡುವಿನ ವೇಳೆಯಲ್ಲಿ, ಅವಳ ಗಮ್ಯದ ಜಗತ್ತಿನ ಬಗ್ಗೆ ಬರೆಯುತ್ತಲೇ ಸ್ತ್ರೀಯರು ಇಂದು ಅದ್ಭುತವಾದ ಸಾಹಿತ್ಯದ ಕೃತಿಗಳನ್ನು ರಚಿಸಿದ್ದಾರೆ. ತಮ್ಮದೇ ಸಾಹಿತ್ಯಿಕ ಗುಂಪುಗಳನ್ನು ಮಾಡಿಕೊಂಡು ಇನ್ನಷ್ಟು ಜನರನ್ನು ತೆಕ್ಕೆಗೆ ಸೆಳೆದುಕೊಳ್ಳುತ್ತಿದ್ದಾರೆ. ಹೆಣ್ಣೊಬ್ಬಳು ಬರವಣಿಗೆಯಲ್ಲಿ ತೊಡಗಿರುವಳೆಂದು ಮನೆಯನ್ನು ಶಬ್ದಮುಕ್ತವಾಗಿಡುವ, ಅವಳ ಕೋಣೆಯಬಾಗಿಲನ್ನು ಶಬ್ದವಾಗದಂತೆ ದೂಡಿ ಕಾಲಕಾಲಕ್ಕೆ ಕಾಫಿತಿಂಡಿಗಳನ್ನು ಪೂರೈಕೆ ಮಾಡುವ, ಅವಳು ಬರೆದುದೆಲ್ಲವನ್ನು ಚಂದವಾಗಿ ಕೈಬರಹದಲ್ಲಿ ಅಥವಾ ಕಂಪ್ಯೂಟರ್ನಲ್ಲಿ ಕಾಪಿ ಮಾಡಿಕೊಡುವ ಎಷ್ಟು ಜನ ಸಂಗಾತಿಗಳಿದ್ದಾರೆಂದು ಚೂರು ಆತ್ಮ ವಿಮರ್ಶೆ ಮಾಡಿಕೊಂಡರೂ ಸಾಕು, ಮಹಿಳಾ ಸಾಹಿತ್ಯದ ಘನತೆ ತನ್ನಷ್ಟಕ್ಕೆ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುತ್ತದೆ. ತಮ್ಮ ಎಲ್ಲ ಕರ್ತವ್ಯಗಳನ್ನು ಮುಗಿಸಿ ರಾತ್ರಿಯನ್ನು ಕರಗಿಸಿ ಸಾಹಿತ್ಯವಾಗಿಸಿರುವವರ ಸಂಖ್ಯೆಯೇ ಹೆಚ್ಚಿದೆ. ಇವೆಲ್ಲವನ್ನೂ ನಾನು ಮಹಿಳಾ ಸಾಹಿತ್ಯಕ್ಕೆ ಮೀಸಲಾತಿ ಬೇಕೆಂಬ ನೆಲೆಯಲ್ಲಿ ಪ್ರಸ್ತಾಪಿಸುತ್ತಿಲ್ಲ. ಇಷ್ಟಾಗಿಯೂ ಸಾಹಿತ್ಯ ಕ್ಷೇತ್ರದಲ್ಲಿ ತನ್ನ ಛಾಪನ್ನು ಸರಿಸಮಾನವಾಗಿ ಸ್ಥಾಪಿಸಿಕೊಳ್ಳುತ್ತಿರುವ ಮಹಿಳೆಯರು ಅಧಿಕಾರದ ವಿಷಯಕ್ಕೆ ಬಂದಾಗ ಪ್ರಸ್ಥಾಪವೇ ಆಗದಿರುವ ವಿಷಾದದ ಬಗೆಗಷ್ಟೆ ಈ ಮಾತು.          ನಿಜವಾಗಿ ನೋಡಿದರೆ ಇಂಥದೊಂದು ಪ್ರಸ್ತಾಪ ಪುರುಷ ಸಾಹಿತಿಗಳಿಂದಲೇ ಒಕ್ಕೊರಲಿನಿಂದ ಬರಬೇಕಾದುದು ಇಂದಿನ ತುರ್ತು.  ಮಹಿಳೆಯೊಬ್ಬರನ್ನು  ಕ. ಸಾ. ಪ. ದ  ಅಧ್ಯಕ್ಷಸ್ಥಾನದಲ್ಲಿ ಈ ಸಲವಾದರೂ ನಾವು ಕಾಣಬೇಕು ಎಂದು ಎಲ್ಲರಿಗೂ ಅನಿಸಲೇಬೇಕು. ಚುನಾವಣೆಯ ಹಂಗೇಕೆಂದು ಬಲಾವಣೆಗಾಗಿ ಅವಿರೋಧವಾಗಿ ಮಹಿಳಾ ಅಧ್ಯಕ್ಷರನ್ನು ಆರಿಸಬಹುದು. ಒಬ್ಬರಿಗಿಂತ ಹೆಚ್ಚು ಮಹಿಳಾ ಸ್ಪರ್ಧಿಗಳಿದ್ದರೆ ಅದೂ ಒಳಿತೆ. ಚುನಾವಣೆ ನಡೆಯಲಿ. ಮಹಿಳಾ ಸ್ಪರ್ಧಿಗಳ ನಡುವೆ ನಡೆವ ಸ್ಪರ್ಧೆಯಲ್ಲಿ ಆಯ್ಕೆಯಾದವರು ಅಧ್ಯಕ್ಷರಾಗಲಿ. ಶತಮಾನದಿಂದ ನಡೆದು ಬಂದಿರುವ ಗಂಡಾಳ್ವಿಕೆಯನ್ನು ಬಿಡುವುದರಲ್ಲಿರುವ ಸುಖವನ್ನು ನಮ್ಮ ಪುರುಷರು ಒಮ್ಮೆ ಅನುಭವಿಸಲಿ ಎಂಬುದು ನನ್ನಾಸೆ.ಅದರ ಬದಲು ಮಹಿಳೆಯರ ಆಯ್ಕೆಗೆಂದು ಮೀಸಲಾತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ತರುವುದು ಬೇಡ. ಹಾಗೆ ತರಲೇಬೇಕೆಂದಾದಲ್ಲಿ ಅದು ಮೊದಲು ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ಬರಲಿ.ಪ್ರಜ್ಞಾವಂತರೆಂದು ಜನರಿಂದ ಗುರುತಿಸಲ್ಪಡುವ ಸಾಹಿತ್ಯ ಕ್ಷೇತ್ರವೂ ಯಾಕೆ ಮೀಸಲಾತಿಯ ಹೇರಿಕೆಯಿಂದ ಸಮಾನತೆಯನ್ನು‌ ಸಾಧಿಸಬೇಕು?        ತೀರ ಮುಜುಗರದಿಂದಲೇ ನಾನಿದನ್ನು ಪ್ರಸ್ತಾಪಿಸುತ್ತಿರುವೆ. ಶಾಲಾ, ಕಾಲೇಜುಗಳ ಹಂತದಿಂದ ಹಿಡಿದು ನಡೆಯುವ ಸಭೆ, ಸಮಾರಂಭಗಳನ್ನು ಗಮನಿಸಿದರೂ ಸಾಕು. ಸಾರ್ವಜನಿಕ ಕಾರ್ಯಕ್ರವಗಳಲ್ಲಿ ಸ್ರ್ತೀ ಯರಿಗೆ ನಾವು ಕೊಡುವ ಪ್ರಾಧಾನ್ಯತೆಯ ಅರಿವಾಗುತ್ತದೆ. ಎಲ್ಲೋ ಸಭೆಯ ಮೂಲೆಯಲ್ಲೊಂದು ಕುರ್ಚಿಯಲ್ಲಿ ಮಹಿಳೆಯೊಬ್ಬರು ಕುಳಿತಿದ್ದರೆ ಹೆಚ್ಚು. ನಡುವೆ ಕುಳಿತಿದ್ದಾರೆಂದರೆ ಅದು ಅವರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಸಫಲತೆಯ ಕಾರಣದಿಂದ ಮಾತ್ರ. ಆದರೆ ಸಾಹಿತ್ಯದಂತಹ ಸೃಜನಶೀಲ ಮತ್ತು ಭಿನ್ನ ಶಾಖೆಗಳನ್ನೊಳಗೊಂಡ ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದೂ ಅಷ್ಟು ಸಮಂಜಸವೆನಿಸದು. ಬಾಲ್ಯದಿಂದಲೂ ಪುರುಷ ಪ್ರಾಧಾನ್ಯದ ಛತ್ರದಡಿಯಲ್ಲಿಯೇ ಬೆಳೆದು ಬಂದ ನಮ್ಮ ತಲೆಮಾರಿನಲ್ಲಿ ಅಧ್ಯಕ್ಷ ಆಯ್ಕೆಯ ಬಗೆಗೂ ಆಂದೋಲನವೇ ನಡೆಯಬೇಕೇನೊ?ಆಸ್ತಿ ಮತ್ತು ಅಧಿಕಾರ ತಮ್ಮ ಹಕ್ಕು ಎಂಬುದನ್ನು ಮೈಗೂಡಿಸಿಕೊಳ್ಳದ ಈ ತಲೆಮಾರಿನ ಸ್ತ್ರೀ ಯರಿಂದ ಅದನ್ನು ನಿರೀಕ್ಷಿಸುವುದೂ ಅತಿ ಮಹತ್ವಾಕಾಂಕ್ಷೆಯೆನಿಸುತ್ತದೆ.   ಆದರೆ ಖಂಡಿತವಾಗಿಯೂ ಕೆಲವು ಪುರುಷರಾದರೂ ಈ  ಆಂದೋಲನಕ್ಕೆ ಜೊತೆಯಾಗುವರೆಂಬ ನಿರೀಕ್ಷೆಯೂ ಬೆಳಕಿನ ಕೋಲಿನಂತೆ ಮಿಂಚುತ್ತದೆ.       ಇಂದಿನ ಯುವ ತಲೆಮಾರು ನಿಜಕ್ಕೂ ಲಿಂಗಸೂಕ್ಷ್ಮತೆಯನ್ನು ಹೊಂದಿದೆಯೆಂದು ಪದೇ ಪದೇ ಸಾಬೀತುಗೊಳ್ಳುತ್ತಿದೆ. ತಮ್ಮ ಸಹ ಬರಹಗಾರರನ್ನು ಹೆಣ್ಣು ಗಂಡುಗಳೆಂಬ ಬೇಧವಿಲ್ಲದೇ ಪರಿಗಣಿಸುವ ಮತ್ತು ಅಧಿಕಾರದಿಂದ ಹಿಡಿದು ಎಲ್ಲವನ್ನೂ ಸಮಾನವಾಗಿ ಪ್ರೀತಿಯಿಂದ ಹಂಚಿಕೊಳ್ಳುವ ವಿಶಾಲ ಮನೋಭಾವವನ್ನು ಇಂದಿನ ಯುವ ಸಾಹಿತಿಗಳು ಹೊಂದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಹೀಗೆಯೇ ಮುಂದುವರೆದಲ್ಲಿ ಕೆಲವೇ ವರ್ಷಗಳಲ್ಲಿ ಸಾಹಿತ್ಯದ ಎಲ್ಲ ಶಕ್ತಿ ಕೇಂದ್ರಗಳಲ್ಲಿ ಲಿಂಗತ್ವದ ಗೆರೆ ಅಳಿಸಿ ಹೋಗಲಿದೆ. ಅದು ಸಂಭವಿಸುವ ಮೊದಲೇ ನಮ್ಮ ತಲೆಮಾರು ಎಚ್ಚೆತ್ತುಕೊಂಡರೆ ಮುಂದಿನ ಪೀಳಿಗೆಗೆ ನಾವು ಮಾರ್ಗದರ್ಶಕರೆನಿಸಿಕೊಳ್ಳುತ್ತೇವೆ. ಏನೇ ಬರೆದರೂ ಅಧಿಕಾರವೆಂಬುವುದು ಅಮಲಾಗಿರುವಾಗ ಅಮಲಿನಲ್ಲಿರುವವರನ್ನು ಎಚ್ಚರಿಸುವುದು ಕಠಿಣ ಕೆಲಸವೆ.          ಮಹಿಳಾ ಶಕ್ತಿಯೆಂಬುದು ಇಂದು ಕಟ್ಟೆಯೊಡೆದ ಪ್ರವಾಹ. ಎಂತಹ ತಡೆಯೇ ಬಂದರೂ ಅದರ ಮುನ್ನುಗ್ಗುವಿಕೆಯನ್ನು ಪ್ರತಿಬಂಧಿಸಲಾಗದು. ಅಧಿಕಾರದ ಚುಕ್ಕಾಣಿ ಹಿಡಿಯಲು ನೀವು ಹೋರಾಡುತ್ತಲೇ ಇರಿ. ನಾವು ಸಾಹಿತ್ಯದ ಹಸಿರುಕ್ಕಿಸುತ್ತಲೇ ಸಾಗುತ್ತೇವೆ. ನಮ್ಮ ತೆಕ್ಕೆಯಲ್ಲಿ ಮುಂದಿನ ಜನಾಂಗವನ್ನು ಕಾಪಿಟ್ಟುಕೊಳ್ಳುತ್ತಲೇ ಅರಿವಿನ ಹಣತೆಯನ್ನು ಬೆಳಗುತ್ತೇವೆ. ಕೈಯಲ್ಲಿ ಬೀಜ ಹಿಡಿದವರಷ್ಟೇ ಕಾಡಿನ ಕನಸು ಕಾಣಬಲ್ಲರು. ಇಂದು ನೀವು ಕೇಳಿದ ಪ್ರಶ್ನೆ ಸ್ವಲ್ಪವೇ ವರ್ಷಗಳಲ್ಲಿ ಉತ್ತರ ಪಡೆದುಕೊಂಡೀತು. ಚುನಾವಣೆಯ ಮೂಲಕವೇ ಅಧ್ಯಕ್ಷ ಸ್ಥಾನ ಮಹಿಳೆಯರಿಗೊಲಿಯಲಿ. *****************************************                                                                     ***********************                                                                     –

ಕಸಾಪಗೆ ಮಹಿಳಾ ಅಧ್ಯಕ್ಷರು Read Post »

ಇತರೆ, ಜೀವನ

ವಿವಾಹ ವ್ಯವಸ್ಥೆ- ಒಂದು ಚರ್ಚೆ

ಚರ್ಚೆ ವಿವಾಹ ವ್ಯವಸ್ಥೆ- ಒಂದು ಚರ್ಚೆ ಚಂದಕಚರ್ಲ ರಮೇಶ ಬಾಬು ಹೊಸ ತಲೆಮಾರಿನ ವಿವಾಹಗಳು ವೈವಿಧ್ಯತೆ ಸಂತರಿಸಿಕೊಂಡಿರುವುದರಿಂದ ಈಗ ನಮ್ಮ ಸಮಾಜದಲ್ಲಿನ ವಿವಾಹ ವ್ಯವಸ್ಥೆಯ ಬಗ್ಗೆ ಒಂಚೂರು ಚರ್ಚೆ ಮಾಡುವ ಎಂತಾಗಿದೆ. ನಮಗೆ ಕಾಣುವ ಹಾಗೆ ವಿವಾಹಗಳಲ್ಲಿ ಎರಡು ರೀತಿಯ ಪ್ರಭಾಗಗಳು ಕಾಣುತ್ತವೆ. ಗಂಡು ಹೆಣ್ಣು ಪ್ರೀತಿಸಿ ತಾವೇ ನಿರ್ಣಯಿಸಿಕೊಂಡು ಮದುವೆ ಯಾಗುವುದು (ಪ್ರೇಮ ವಿವಾಹ)  ಮತ್ತೊಂದು ಸಾಂಪ್ರದಾಯಿಕವಾಗಿ ನಡೆದು ಬಂದ ರೀತಿಯಲ್ಲಿ ಮನೆಗೆ ದೊಡ್ಡವರು ಹೆಣ್ಣು ನೋಡಿ ನಿಶ್ಚಯಿಸಿ ಮದುವೆ ಮಾಡುವುದು ( ಅರೇಂಜ್ಡ್ ಮ್ಯಾರೇಜ್) ನಮ್ಮ ವಿವಾಹ ಪದ್ಧತಿಗಳಲ್ಲಿ ಗಾಂಧರ್ವ ವಿವಾಹ, ರಾಕ್ಷಸ ವಿವಾಹ ಅಂತ ಮತ್ತೆ ಸುಮಾರು ತರಗಳಿವೆ. ಆದರೆ ನಾವು ಪ್ರಸಕ್ತ ಸಮಾಜದಲ್ಲಿ ನಡೆಯುತ್ತಿರುವ ರೀತಿ ನೀತಿಗಳಿಗೆ ಸಂಬಂಧಪಟ್ಟಂತೆ ನಡೆಯುವ ವಿವಾಹಗಳ ಬಗ್ಗೆ ಮಾತ್ರ ಮಾತಾಡೋಣ. ಸದ್ಯದ ದಿನಗಳಲ್ಲಿ ಬಳಕೆಯಲ್ಲಿರುವ ಈ ’ಪ್ರೇ’ ಎನ್ನುವ ಪದದ ಅರ್ಥ ನಿಘಂಟುವಿನ ಪ್ರಕಾರ  “ಪ್ರೀತಿ, ಸ್ನೇಹ, ಅನುರಾಗ, ಮಮತೆ” ಅಂತೆಲ್ಲ ಇದೆ. ಸಂಸಾರದಲ್ಲಿಯ ಸದಸ್ಯರ ನಡುವೆ ಪ್ರೀತಿ, ಪ್ರೇಮ ಇರುತ್ತವೆ. ಆದರೆ ಅಲ್ಲಿಯ ಪ್ರೇಮಕ್ಕೂ, ವಿವಾಹ ಸಂಬಂಧೀ ಪ್ರೇಮಕ್ಕೂ ವ್ಯತ್ಯಾಸವಿದೆ. ವಿವಾಹ ಸಂಬಂಧದ ಪ್ರೇಮ ಎಂದರೆ ಗಂಡು ಹೆಣ್ಣಿನ ನಡುವಣ ಪ್ರೀತಿ ಮಾತ್ರ ಅಂತ ಸಿನಿಮಾಗಳಲ್ಲಿ ಬಳಸುವ ಅರ್ಥದಿಂದಲೇ ಹುಟ್ಟಿ ಬಂದಿದೆ. ಇನ್ನೂ ಹೇಳ ಬೇಕೆಂದರೆ ಬೇರೇ ಜಾತಿ, ಬೇರೇ ಪಂಗಡ, ಬೇರೇ ಧರ್ಮದ ಹುಡುಗ, ಹುಡುಗಿಯರ ನಡುವಿನ ಪ್ರೀತಿಗೆ ಮಾತ್ರವೇ ಪ್ರೇಮ ಎನ್ನುವ ಹಾಗೆ ಬಳಕೆ ಯಾಗುತ್ತಿದೆ. ಪ್ರೇಮ ವಿವಾಹ ಎಂದರೆ ಇದೇ ರೀತಿಯ ಮದುವೆ. ಒಂದೇ ಜಾತಿಯ ಹುಡುಗ ಹುಡುಗಿ ಇಷ್ಟಪಟ್ಟು ಮದುವೆಯಾದರೇ ಅದು ಪ್ರೇಮ ವಿವಾಹದ ಕೆಳಗೆ ಬರುತ್ತದಾ ? ಇದಕ್ಕೆ ಉತ್ತರವಿಲ್ಲ. ಮತ್ತೊಂದು ರೀತಿ ಮದುವೆಯ ಬಗ್ಗೆ ಜಾಸ್ತಿ ಹೇಳಬೇಕಿಲ್ಲ. ದೊಡ್ಡವರ ಅನುಭವಕ್ಕೆ ಮಣೆ ಹಾಕಿ, ಅವರು ನಮ್ಮ ಒಳಿತನ್ನೇ ನೋಡುತ್ತಾರೆ ಅಂತ ನಂಬಿ, ಅವರು ನಿರ್ಣಹಿಸಿದ ಹೆಣ್ಣು/ಗಂಡನ್ನು ತಾವೂ ನೋಡಿ, ಒಪ್ಪಿ ಮದುವೆಯಾಗುವುದು.. ಲವ್ ಮ್ಯಾರೇಜ್ ( ಈಗಿನ ಪ್ರೇಮ ವಿವಾಹಗಳ ತುಂಬಾ ಕೇಳಿ ಬರುವ ಹೆಸರು) ಮಾಡಿಕೊಳ್ಳ ಬಯಸುವ ಜೋಡಿಯ ವಾದನೆ “ ದೊಡ್ಡವರು ನೋಡಿ ನಿಶ್ಚಯಿಸಿದ ಮದುವೆಗಳಲ್ಲಿ ಪ್ರೀತಿ ಎಲ್ಲಿರುತ್ತದೆ ?” ಅಂತ. ಯಾಕಿರಬಾರದು ಅಂತ ಅವರಿಗೆ ಅನಿಸುವುದಿಲ್ಲ. ಆ ವಯಸ್ಸೇ ಹಾಗೆ. ದುಡುಕುತನ ತುಂಬಿದ ಪ್ರಾಯ. ತಾವು ಬಲೆಗೆ ಬಿದ್ದ ಆಕರ್ಷಣೆಗೆ ಒಂದು ವಾದನೆಯನ್ನು ಹುಟ್ಟಿಸಿಕೊಂಡು ಅದಕ್ಕೇ ಜೋತು ಬೀಳುವ ಕ್ರಮ. ಆದರೆ ಅದೊಂದೇ ವಾಸ್ತವವಲ್ಲ. ಕೆಲ ಹುಡುಗ/ಹುಡುಗಿಯರು ತಮ್ಮ ಶಾಲೆ ಕಾಲೇಜುಗಳಲ್ಲಿ ತಾವು ರುಚಿ ನೋಡಿದ ಮಧುರ ಗಳಿಗೆಗಳನ್ನು ಬರೀ ಮಕ್ಕಳ ಆಟಿಕೆಯ ಆಕರ್ಷಣೆ ಎಂದು ಮರೆತು ತಮ್ಮ ತಂದೆ ತಾಯಿ ನೋಡಿದ ಮದುವೆಗಳಿಗೆ ಒಪ್ಪುತ್ತಾರೆ. ಮತ್ತೆ ಕೆಲವರು ಅತ್ತ ಪ್ರೀತಿಸಿದವಳನ್ನು ಮದುವೆಯಾಗಲಾರದೇ ಭಗ್ನ ಪ್ರೇಮಿಗಳಾಗುತ್ತಾರೆ. ಅಥವಾ ದೊಡ್ಡವರು ಹೇಳಿದ ಮದುವೆಗೆ ಒಪ್ಪಿ ಬೇರೇ ಯಾರನ್ನೋ ಮದುವೆಯಾಗಿ ಆ ಬಂಧದಲ್ಲಿಯ ಆತ್ಮೀಯ ಭಾವನೆಗೆ ದೂರವಾಗುತ್ತಾರೆ. ಎರಡೂ ಪದ್ಧತಿಗಳಲ್ಲೂ ಒಳಿತುಗಳಿವೆ, ಕೆಡಕುಗಳಿವೆ. ಯಾವುದನ್ನೂ ನಾವು ಇದೇ ಸರಿಯೆಂದು ಹೇಳಲಾಗುವುದಿಲ್ಲ. ಯಾವುದನ್ನೂ ಬೇಡದ್ದೆಂದು ತೆಗೆದು ಹಾಕಲಾಗುವುದಿಲ್ಲ. ಪ್ರೇಮ ವಿವಾಹ ( ಲವ್ ಮ್ಯಾರೇಜ್ ) ಗಳು ಮಾತ್ರ ಇಷ್ಟು ದಶಕಗಳು  ಕಳೆದರೂ ತಂದೆ ತಾಯಿಗಳ ಮನಸ್ಸಿಗೆ ಬೆಂಕಿ ಹಚ್ಚುವ ಮದುವೆಗಳೇ. ತಾವು ಬೆಳೆಸಿದ ಮಕ್ಕಳು ತಮ್ಮ ಕಣ್ಣೆದುರಲ್ಲೇ ತಮ್ಮನ್ನು ಎದುರಿಸಿ ತಮ್ಮ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ತಮಗೆ ತಿಳಿದ ಹಾಗೆ ಮಾಡುವುದು ಯಾವ ತಂದೆ ತಾಯಿಗೂ ರುಚಿಸುವುದಿಲ್ಲ. ಮತ್ತೆ ಅವರ ಅಂತಸ್ತು, ಸಮಾಜದಲ್ಲಿ ಅವರಿಗಿರುವ ಮಾನ ಮರ್ಯಾದೆ ಮತ್ತೆ ಒಮ್ಮೊಮ್ಮೆ ಬರೀ ಅಹಂಕಾರ. ಇವೆಲ್ಲ ಅಡ್ಡ ಬರುತ್ತವೆ. ಕೆಲ ಸೌಮ್ಯ ಸ್ವಭಾವದ ತಂದೆ ತಾಯಿಯರು ತಮ್ಮ ಮಕ್ಕಳ ಆಯ್ಕೆ, ಭವಿಷ್ಯ ನೋಡಿ ಒಪ್ಪುತ್ತಾರೆ. ಅವರ ನಿಲುವು ಇಷ್ಟೇ “ ಮದುವೆಯಾಗಿ ಒಟ್ಟಿಗೆ ಜೀವನ ಮಾಡುವವರು ಅವರಿಬ್ಬರೂ. ನಾವು ಇಂದು ಇದ್ದೇವೆ, ನಾಳೆ ಇಲ್ಲ. ಅವರ ಆಯ್ಕೆಗೆ ನಾವೇಕೆ ಅಡ್ಡಿ ಹೇಳುವುದು “ಅಂತ.  ಈ ತರದ ನಿಲುವಿನಲ್ಲಿ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಅವರಿಗಿರುವ ದೂರದೃಷ್ಟಿ ಮತ್ತು ಅವರ ವೈರಾಗ್ಯ ಕಾಣುತ್ತದೆ. ಆದರೆ ಇಲ್ಲಿ ಬಹುಭಾಗ ನಮಗೆ ಕಾಣ ಸಿಗುವುದು ಮಧ್ಯ ತರಗತಿಯ ಕುಟುಂಬಗಳೇ. ಇವರಿಗಿಂತ ಒಂದು ಮೆಟ್ಟಿಲು ಮೇಲಿರುವ ವರ್ಗದವರು ಆಷ್ಟು ಬೇಗ ಪ್ರೇಮ ವಿವಾಹಕ್ಕೆ ಒಪ್ಪುವುದಿಲ್ಲ. ತಮಗಿರುವ ಎಲ್ಲ ರೀತಿಯ ದಾರಿಗಳಿಂದ ಮಕ್ಕಳನ್ನು ಒಪ್ಪಿಸುವ ಪ್ರಯತ್ನ ಮಾಡುತ್ತಾರೆ. ಒಪ್ಪದಿದ್ದಲ್ಲಿ ಹಿಂಸೆಗೂ ಹೇಸುವುದಿಲ್ಲ. ಇವರಿಗೆ ಸಮಾಜದ ನೋಟ ಮುಖ್ಯ. ಉತ್ತರ ಭಾರತದ ಕೆಲ ಭಾಗಗಳಲ್ಲಿ ಈ ರೀತಿಯ ಪ್ರೇಮ ವಿವಾಹಗಳಾದಲ್ಲಿ ಹೆಣ್ಣು ಕುಟುಂಬದ ಕಡೆಯವರು “ ಆನರ್ ಕಿಲ್ಲಿಂಗ್ ’ ಹೆಸರಲ್ಲಿ ಹುಡುಗನನ್ನು ಅಥವಾ ಇಬ್ಬರನ್ನೂ ಕೊಂದ ಪ್ರಕರಣಗಳು ಸಾಕಷ್ಟಿವೆ. ಅವರನ್ನು ತಮ್ಮ ಮನೆಗೆ ಬರಗೊಡದಿರುವುದು ಮುಂತಾದವುಗಳಿಂದ ಆ ದಂಪತಿಗಳಿಗೆ ಸಾತ್ವಿಕ ಹಿಂಸೆ ಕೊಡುತ್ತಾರೆ. ಪ್ರೇಮ ವಿವಾಹ ಮಾಡಿಕೊಂಡ ಜೋಡಿಗಳು ಒಮ್ಮೊಮ್ಮೆ ಭಿನ್ನ ಹಿನ್ನೆಲೆಗಳಿಂದ ಹೊಂದಾಣಿಕೆ ಕಾಣದೆ ಕಷ್ಟ ಪಡುತ್ತಾರೆ. ತಮ್ಮ ತಂದೆ ತಾಯಿಯರನ್ನು ಮತ್ತು ಬಂಧುವರ್ಗದವರ ಸಾನ್ನಿಹಿತ್ಯ ಕಳೆದುಕೊಂಡು ಮಾನಸಿಕ ದೌರ್ಬಲ್ಯಕ್ಕೊಳಗಾಗುತ್ತಾರೆ. ಈಗ ಎರಡೂ ಕಡೆಯ ವಾದಗಳನ್ನು ಒಮ್ಮೆ ತೂಗಿ ನೋಡೋಣ. ಪ್ರೇಮಿಗಳ ವಾದ: ನಾವು ಯುಕ್ತವಯಸ್ಕರಾಗಿದ್ದೇವೆ. ನಮ್ಮ ಬೇಕು ಬೇಡಗಳು ನಮಗೆ ಗೊತ್ತು. ನಮ್ಮ ವೈವಾಹಿಕ ಜೀವನ ಹೇಗಿರಬೇಕು ಎಂಬುದರ ಬಗ್ಗೆ ನಮಗೆ ಅರಿವಿದೆ. ನೀವೇನೋ ತ್ಯಾಗ ಮಾಡಿದ್ದೇವೆ ಎನ್ನುವುದು ಬೇಡ. ನಮ್ಮ ಬಾಲ್ಯದ ಮಧುರಕ್ಷಣಗಳನ್ನು ನಾವು ನಿಮಗೆ ಕೊಟ್ಟಿಲ್ಲವೇ ? ನನಗೆ ಆ ಹುಡುಗನ/ಹುಡುಗಿಯ ಪರಿಚಯವಿದೆ. ಅವಳ/ಅವನ ಜೊತೆ ನನ್ನ ಬಾಳು ಹಸನಾಗಿರುತ್ತದೆ. ಸಮಾಜ ಬದಲಾಗುತ್ತಿದೆ. ನೀವು ಸಹ ಆಗಿ. ಇನ್ನೆಷ್ಟು ದಿನ ನೀವು ನಿಮ್ಮ ಇಷ್ಟಾಯಿಷ್ಟಗಳನ್ನು ನಮ್ಮ ಮೇಲೆ ಹೇರುತ್ತೀರಿ? ಅಮೆರಿಕ, ಯೂರೋಪ್ ದೇಶಗಳ ಜನರನ್ನು ನೋಡಿ. ತಮಗೆ ಬೇಕಾದವರನ್ನು ಡೇಟಿಂಗ್ ಗಳ ಮೂಲಕ ತಾವೇ ಆರಿಸಿಕೊಳ್ಳುತ್ತಾರೆ. ಹುಡುಗಿಯರಾದರೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನೀವು ಯಾರೋ ನೋಡಿದ ಅಪರಿಚಿತ ಹುಡುಗನಿಂದ ಕತ್ತು ಬಗ್ಗಿಸಿ ತಾಳಿ ಕಟ್ಟಿಸಿಕೊಳ್ಳಲು ನಾನು ತಯಾರಿಲ್ಲ ಅಂತಲೂ ಹೇಳುವುದಿದೆ. ದೊಡ್ಡವರ ವಾದಃ ನೀವೆಷ್ಟೇ ದೊಡ್ಡವರಾದರೂ ಸಮಾಜದಲ್ಲಿನ ಒಳಿತು ಕೆಡಕುಗಳ ಪರಿಚಯವಿರುವುದಿಲ್ಲ. ಅದಕ್ಕೆ ನಾವು ಹಿನ್ನೆಲೆ ಎಲ್ಲ ವಿಚಾರಿಸಿ, ನೋಡಿ ಮದುವೆ ಮಾಡುತ್ತೇವೆ. ಅದಕ್ಕೆ ಏಕೆ ಆಕ್ಷೇಪಣೆ? ನಾವೇನು ನಿಮ್ಮ ಶತ್ರುಗಳೇ ? ನಿಮ್ಮ ಒಳಿತು ಕೆಡುಕು ನಮಗೆ ಗೊತ್ತಾಗೋದಿಲ್ವಾ ? ನಾವದೆಷ್ಟು ನಮ್ಮ ಸುಖಗಳನ್ನು ತ್ಯಾಗ ಮಾಡಿ ನಿಮ್ಮನ್ನು ಬೆಳೆಸಿದ್ದೇವೆ ಗೊತ್ತಾ? ಕೊನೆಗೆ ಈ ತರನಾ ಮಾಡೋದು? ನಾವೆಲ್ಲ ಈ ತರದ ಮದುವೆ ಆದವರೇ. ನಾವೇನಾಗಿದ್ದೇವೆ ? ನಮ್ಮ ಜಾತಿಯವರಲ್ಲಿ ನಮ್ಮ ಮರ್ಯಾದೆ ಉಳಿಯುತ್ತದೆಯೇ ? ನಾಲ್ಕು ಜನದ ನಡುವೆ ಜೀವನ ನಡೆಸುವುದು ಹೇಗೆ ? ನಿಮ್ಮ ತಂಗಿಯ ಮದುವೆ ಹೇಗಾದೀತು ನೀನು ಈ ರೀತಿ ಮಾಡಿದರೆ ? ಎರಡೂ ಕಡೆಯ ವಾದಗಳಲ್ಲಿ ನಿಜಾಂಶಗಳಿಲ್ಲ ಅಂತ ಹೇಳಲಾಗದು. ೨೦ನೆಯ ಶತಮಾನದ ಕೊನೆಯಲ್ಲಿ ಪ್ರಾರಂಭವಾದ ತಂತ್ರಜ್ಞಾನದ ಸ್ಫೋಟ ಇಡೀ ಜಗತ್ತಿನ ಜೊತೆಗೆ ಭಾರತದ ಸಮಾಜಕ್ಕೂ ತನ್ನ ಪ್ರಭಾವ ತೋರಿತು. ಹೆಣ್ಣುಮಕ್ಕಳಿಗೆ ಕೆಲಸ ಸಿಗಲು ಆರಂಭವಾಯಿತು. ಕೈತುಂಬಾ ಸಂಬಳ ಬರಲು ಶುರುವಾಯಿತು. ಕೆಲಸದ ಸಲುವಾಗಿ ನಗರಗಳಿಗೆ ಹೋಗುವುದು ನಡೆಯಿತು. ಅಲ್ಲಿಯ ವರೆಗೆ ನೆಂಟರಿಷ್ಟರ ಮನೆಗಳಲ್ಲಿ ಇರುತ್ತಿದ್ದ ಹೆಣ್ಣು ಮಕ್ಕಳು ಪೇಯಿಂಗ್ ಗೆಸ್ಟ್ ಗಳಾಗಿ ಇರುತ್ತ ಸ್ವತಂತ್ರವಾಗಿ ಇರಲು ಶುರುವಾಯಿತು. ಇತರೆ ರಾಜ್ಯಗಳ, ಪ್ರದೇಶಗಳ ಹುಡುಗರ ಜೊತೆ ಬೆರೆಯುವುದು ಪ್ರಾರಂಭವಾಯಿತು. ಇದೆಲ್ಲದರ ಜೊತೆ ಅಂತರ್ಜಾಲ ತುಂಬಾ ಸುಲಭದಲ್ಲಿ ಸಿಗುವಂತಾಗಿ ಜಗತ್ತಿನ ಬೇರೇ ಬೇರೇ ಸಮಾಜಗಳ ರೀತಿ ನೀತಿ, ಆಚಾರ ವ್ಯವಹಾರ ಗೊತ್ತಾಗಲು ಮೊದಲಾಯಿತು. ಒಂದು ರೀತಿ ಹೇಳ ಬೇಕೆಂದರೆ ಅಲ್ಲಿಯ ವರೆಗಿದ್ದ ಸಮಾಜದ ಮುಖವೇ ಬದಲಾಯಿತು. ಆಗಲೇ ಈ ರೀತಿಯ ಪ್ರೇಮ ವಿವಾಹಗಳು ಸಹ ಹೆಚ್ಚುತ್ತ ಹೋದವು. ತನಗೆ ಮೆಚ್ಚುಗೆಯಾದ ಹುಡುಗ/ಹುಡುಗಿಯರಲ್ಲಿ ಗುಣ ನೋಡಲಾರಂಭಿಸಿದ ಯುವ ಪೀಳಿಗೆ, ತಾವಿರುವ ಸಮಾಜದ ಕಟ್ಟಳೆಗಳನ್ನು ಗಣನೆಗೆ ತೆಗೆದುಕೊಳ್ಳದಿರುವುದು ಪ್ರಾರಂಭವಾಯಿತು. ಅಲ್ಲಿಂದ ಪ್ರಾರಂಭವಾದ ಈ ಪ್ರೇಮ ವಿವಾಹದ ರಭಸ ದೊಡ್ಡವರು ನೋಡಿ ಮಾಡುವ ವಿವಾಹ ವ್ಯವಸ್ಥೆಯನ್ನು ಮತ್ತು ಅದರಲ್ಲಿಯ ಪ್ರೀತಿಯನ್ನು ಪ್ರಶ್ನಿಸುವ ಮಟ್ಟಕ್ಕೆ ಬಂದಿದೆ. ಹೀಗೆ ಬದಲಾದ ದೃಷ್ಟಿಕೋನಕ್ಕೆ ಪೂರಕವಾಗಿ ನಮ್ಮ ಚಲನ ಚಿತ್ರಗಳು ಸಹ ಪ್ರೇಮದ ಕತೆಗಳನ್ನು ತೆಗೆದು ಅವುಗಳ ಪರವಾಗಿ ತಮ್ಮ ವಾದವನ್ನು ಮಂಡಿಸುವ ಸಂದೇಶಗಳನ್ನು ನೀಡಲಾರಂಭಿಸಿದವು. ಇದರಿಂದ ಯುವಲೋಕವೆಲ್ಲ ಒಂದು ತರವಾದ ರೆಬೆಲ್ ಮನಸ್ತತ್ವವನ್ನು ಅಳವಡಿಸುಕೊಂಡಿತು. ತಂದೆ ತಾಯಿಯರ ಮಾತು ಲಕ್ಷ್ಯವಿಲ್ಲದಾಯಿತು. ತಮಗೊಂದು ಸ್ಪೇಸ್ ಎಂಬ ಹೊಸ ಪದವನ್ನು ಹುಟ್ಟು ಹಾಕಿಕೊಂಡು ತಾವು ಮಲಗುವ ಕೋಣೆಗೆ ಬಾಗಿಲು ಜಡಿತು ತಮ್ಮದೇ ಲೋಕದಲ್ಲಿ ಇರಲು ಆರಂಭಿಸಿತು. ಅಮ್ಮ ಅಡಿಗೆ ಮಾಡುವುದಕ್ಕೆ, ಅಪ್ಪ ಎಟಿಎಂ ಕಾರ್ಡಿಗೆ ಹಣ ಹಾಕುವುದಕ್ಕೆ ಎನ್ನುವ ಧೋರಣೆ ಜಾಸ್ತಿಯಾಯಿತು. ಸಾಮಾಜಿಕ ಜಾಲತಾಣಗಳು ಬಳಕೆಗೆ ಬಂದ ಮೇಲಂತೂ ಯುವ ಪೀಳಿಗೆ ತಮ್ಮದೇ ಆದ ಲೋಕದಲ್ಲಿ ಸಂಚರಿಸಲಾರಂಭಿಸಿತು. ಇವರಿಗೆ ಮಾಧ್ಯಮಗಳಲ್ಲಿಯ ತಮ್ಮ ಸ್ನೇಹಿತರು ಹೇಳಿದ್ದೇ ವೇದವಾಕ್ಯ, ಅವರು ಮಾಡಿದ್ದೇ ಅನುಕರಣೆಗೆ ಯೋಗ್ಯ. ಹೀಗಿರುವ ಇವರಿಗೆ ಅರೇಂಜ್ಡ್ ಮದುವೆಗಳಲ್ಲಿ ಪ್ರೀತಿ ಇರುವುದಿಲ್ಲ ಎನಿಸುವುದು ಸ್ವಾಭಾವಿಕವಾಯಿತು. ನಮ್ಮ ದೇಶದಲ್ಲಿಯ ಅಂಕೆ ಸಂಖ್ಯೆಗಳ ಪ್ರಕಾರ ಪ್ರೇಮ ವಿವಾಹಗಳು ಶೇಕಡಾ ೧೮ ಮಾತ್ರ. ಇದರರ್ಥ ಇನ್ನೂ ೮೨% ಹುಡುಗರು ತಮ್ಮ ತಂದೆತಾಯಿಯ ಮಾತಿಗೆ ಬೆಲೆ ಕೊಡುತ್ತಿದ್ದಾರೆ ಅಂತಾಯಿತು. ಅವರು ತಮಗೆ ತೋರುವ ಪ್ರೀತಿ, ಭದ್ರತಾ ಭಾವಕ್ಕೆ ತಮ್ಮ ಮತ ಎಂದು ತೋರಿಸುತ್ತಿದ್ದಾರೆ ಅಂತಾಯಿತು. ಮತ್ತೆ ನಗರಗಳಲ್ಲಿ ಬಿಟ್ಟರೆ ನಮ್ಮ ಸಮಾಜದಲ್ಲಿ ಮದುವೆ ವಿಚ್ಛೇದನೆ ಸಹ ತುಂಬಾ ಕಮ್ಮಿ. ಇನ್ನೂ ಮದುವೆ ಎನ್ನುವ ವ್ಯವಸ್ಥೆಗೆ ಗೌರವ, ಮರ್ಯಾದೆ ತೋರುತ್ತಿದ್ದಾರೆ ಅಂತಾಯಿತು. ಏನೇ ಇರಲಿ ಎರಡೂ ಕಡೆಯವರು ಅರ್ಥ ಮಾಡಿಕೊಳ್ಳ ಬೇಕಾದ ಕೆಲ ವಿಷಯಗಳ ಕಡೆ ಗಮನ ಕೊಟ್ಟಲ್ಲಿ ಎರಡೂ ತರದ ವಿವಾಹಗಳು ಸಫಲವಾಗಿ ನಿಲ್ಲುತ್ತವೆ. ೧. ಮಕ್ಕಳು ತಮ್ಮ ತಂದೆ ತಾಯಿಯರ ಬಗ್ಗೆ ಗೌರವ ಹೊಂದಿರ ಬೇಕು. ಅವರು ತಮಗೆ ಒಳ್ಳೆಯ ಭಾಗಸ್ವಾಮಿಯನ್ನು ಹುಡುಕುತ್ತಾರೆ ಎನ್ನುವ ಭರವಸೆ ಇಡಬೇಕು. ತಮ್ಮ ಸ್ನೇಹಿತರು ಪ್ರೇಮದಲ್ಲಿ ಸಿಲುಕಿದಾರೆ ಎಂದು ತಾವು ಅನುಕರಿಸ ಬಾರದು. ೨. ಮಕ್ಕಳು ತಾವು ಪ್ರೇಮಿಸಿದ ವ್ಯಕ್ತಿಯನ್ನು ಮದುವೆಯಾಗ ಬೇಕೆಂದು ತಿಳಿಸಿದಾಗ ದೊಡ್ಡವರು ಸಹ ಅವರು ಆರಿಸಿದವರನ್ನು ಪರಿಶೀಲಿಸಿ ಒಪ್ಪಬೇಕು. ಮುಂದಿನ ಜೀವನ ಅವರದ್ದೇ ಅಲ್ಲವೇ ! ಸಮಾಜದಲ್ಲಿ ತಮ್ಮ ಅಹಂ, ಮರ್ಯಾದೆಯ ಬಗ್ಗೆ ಜಾಸ್ತಿ ಕಾಳಜಿ ಮಾಡಿ ಅವರ ಜೀವನಕ್ಕೆ ಕುತ್ತಗಬಾರದು. ೩. ದೊಡ್ಡವರು ನೋಡಿ ಮಾಡುವುದು ನಿಯಂತೃತ್ವ ಧೋರಣೆ ಎಂದು ಇವರು, ಪ್ರೇಮ ವಿವಾಹಗಳು ನಿಲ್ಲಲಾರವು ಎಂದು ದೊಡ್ಡವರು ನಿರ್ಣಯಿಸುವುದನ್ನು ಬಿಡಬೇಕು. ಎರಡೂ ಕಡೆಯವರು ತಮ್ಮ ಮುಂದಿನ ಪೀಳಿಗೆಗಳ ಭವಿತವ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯಾರಿಗೂ ನೋವಾಗದಂತೆ ಮದುವೆಗಳು ನಡೆಸ ಬೇಕು. ಬದಲಾಗುತ್ತಿರುವ ಸಮಾಜದ ಬಗ್ಗೆ ಗೌರವವಿಟ್ಟುಕೊಳ್ಳ ಬೇಕು. ಹಠಕ್ಕೆ ಬಿದ್ದು ಕುಟುಂಬಗಳಲ್ಲಿ ನೋವು, ಹಿಂಸೆ ತಂದುಕೊಳ್ಳಬಾರದು. ಮದುವೆ ಎನ್ನುವ ನಮ್ಮ ಸಂಸ್ಕೃತಿಯ ವ್ಯವಸ್ಥೆಯನ್ನು ಮುಂದಿನ ಕೆಲ ಪೀಳಿಗೆಗಳ ವರೆಗೂ ಮುಂದುವರೆಸುವಂತಾಗಬೇಕು. *********************************************************

ವಿವಾಹ ವ್ಯವಸ್ಥೆ- ಒಂದು ಚರ್ಚೆ Read Post »

ಇತರೆ

ಅಮ್ಮನ ಸೆರಗ ಬಿಡಿಸಿದ ಬೆರಳುಗಳು

ಅಮ್ಮನ ಸೆರಗ ಬಿಡಿಸಿದ ಬೆರಳುಗಳು ಶಿಶುವಿಹಾರ ಮತ್ತು ಅಂಗನವಾಡಿಗಳ ಅಮ್ಮನಂತಹ ಶಿಕ್ಷಕಿಯರಿಗೊಂದು ಸೆಲ್ಯೂಟ್ ಪ್ರಜ್ಞಾ ಮತ್ತಿಹಳ್ಳಿ ಎಳೆಬಿಸಿಲು ಹಾಕಿದ ರಂಗೋಲಿಯ ಚಿತ್ತಾರಗಳು ಅಂಗಳ ತುಂಬಿದ ಹೂಬಳ್ಳಿಗಳೊಂದಿಗೆ ಪೈಪೋಟಿಗಿಳಿದಿದ್ದಾವೆ. ಎಸಳು ಮೊಗ್ಗಿನಂತಹ ಪುಟಾಣಿಗಳ ದಂಡೊಂದು ಗೇಟಿನ ಬಳಿ ಬಂದು ರಾಗವಾಗಿ ಕರೆಯುತ್ತಿದೆ. “ಪುಟ್ಟೂ ಶಾಲೀಗ್ ಬಾ” ನಿದ್ದೆ ಬಿಟ್ಟೇಳದ ಕಣ್ಣಿನ ಮಗುವೊಂದನ್ನು ಅಳುವಿನ ರಾಗಾಲಾಪದ ಹಿನ್ನೆಲೆ ಸಂಗೀತದೊಂದಿಗೆ ಎತ್ತಿಕೊಂಡು ತಂದರು. “ಯಾಕೆ ಅಳೂದ್ಯಾಕೆ? ಜಾಣಲ್ಲ ನೀನು” ಎನ್ನುತ್ತ ಅಮ್ಮನ ಸೆರಗ ಬಿಗಿಯಾಗಿ ಹಿಡಿದುಕೊಂಡ ಬೆರಳುಗಳ ಮೆತ್ತಗೆ ಬಿಡಿಸುತ್ತ ಪುಸಲಾಯಿಸುವ ಮಾತುಗಳಿಂದ ಸಂತೈಸುತ್ತ ಹೊರಟವರು ಅಮ್ಮನಲ್ಲದ ಆದರೆ ಅಮ್ಮನಂತೆಯೇ ಇರುವ ಅಕ್ಕೋರು. (ಟೀಚರು) ಶಾಲೆಯ ಬಾಗಿಲ ಬೀಗ ತೆಗೆದು ಚಿಲಿಪಿಲಿ ಹಿಂಡನ್ನು ಒಳಗೆ ಸಾಲಾಗಿ ಕೂರಿಸಿ, ಏರುದನಿಯಲ್ಲಿ ಅವರನ್ನೆಲ್ಲ ನಿಯಂತ್ರಿಸುತ್ತ, ಅಳುವ ಕೂಸುಗಳ ಎತ್ತಿಕೊಳ್ಳುತ್ತ, ಪುಂಡಾಟದವರ ಗದರಿಸುತ್ತ, ತಮ್ಮ ತಾಯಂದಿರಿಂದ ಸಂಭಾಳಿಸಲಾಗದೇ ಅವರನ್ನು ಸುಸ್ತು ಮಾಡುವ ಪ್ರತಿ ಮನೆಯ ಮುದ್ದು ರಕ್ಕಸರನ್ನು ಒತ್ತಟ್ಟಿಗೆ ಸೇರಿಸಿಕೊಂಡು ಬಾಲವಾಡಿ ಅಥವಾ ಶಿಶು ವಿಹಾರ ಎಂಬ ಚಿಲಿಪಿಲಿ ಕೇಂದ್ರ ನಡೆಸುವ ಸಹನೆಯ ಕಡಲೊಡತಿಯರಿಗೆ ಎಲ್ಲ ಮುದ್ದು ಮಕ್ಕಳ ವತಿಯಿಂದ ಹಾಗೂ ಪಾಲಕರ ವತಿಯಿಂದ ಶಿಕ್ಷಕರ ದಿನದ ಶುಭಾಶಯಗಳು. ಹೂಹೂವಿನ ಸೀರೆಯ ಸೆರಗನ್ನು ಸೊಂಟಕ್ಕೆ ಸಿಕ್ಕಿಸಿಕೊಂಡು ನೀಲಿಚುಕ್ಕೆಯ ಬಳೆಗಳನ್ನು ಹಿಂದಕ್ಕೆ ಸರಿಸಿ ಕೈ ತಿರುಗಿಸುತ್ತ ಏರುದನಿಯಲ್ಲಿ ರಾಗವಾಗಿ ಹಾಡುತ್ತಿದ್ದಾರೆ. ಅಳು, ಗದ್ದಲ, ಕೇಕೆ ನಇಲ್ಲಿಸಿದ ಕಂದಮ್ಮಗಳು ಮಂತ್ರದ ಮೋಡಿಗೆ ಸಿಕ್ಕಿದ ಹಾವುಗಳಂತೆ ಬಟ್ಟಲು ಕಣ್ಣರಳಿಸಿ ತಾವೂ ಹಾಡುತ್ತಿವೆ. “ಪೊಂ ಪೊಂ ಗಾಡಿ, ಯಾರು ಬಂದಾರವ್ವ, ಮಾಮಾ ಬಂದಾನವ್ವ, ಏನ್ ತಂದಾನವ್ವ, ಹಂಡಿಯಂಥ ಹೊಟ್ಟೆ ಬಿಟ್ಕೊಂಡು ಹಾಂಗ ಬಂದಾನವ್ವ” ಹೊಟ್ಟೆಯ ಅಭಿನಯ ಮಾಡುವಾಗ ತರಗತಿಯಿಡೀ ಕ್ಕಿಕ್ಕಿಕ್ಕಿ ನಗೆಯ ಕಡಲಲ್ಲಿ ತೇಲುತ್ತದೆ. ಹಾಡುಗಳು ಹಾಗೆಯೇ ಅವ್ಯಾಹತವಾಗಿ ಮುಂದುವರೆಯುತ್ತವೆ. “ಬಾ ಬಾರೆ ಕಂದ ಬಾರೆ ಸುನಂದ ಬೇಸರ ಬಂದೈತಿ ಆಡೋಣ” ಹಾಡಿನ ಹಾದಿ ಹಿಡಿದು ಹೊರಟ ಹಸುಮನಸುಗಳೆಲ್ಲ ಮನೆ, ಅಳು, ರಗಳೆ ಮರೆತು ತರಗತಿಯಿಡೀ ಒಂದೇ ಶೃತಿಗೆ ಹದಗೊಂಡಾದ ಮೇಲೆ ಶುರುವಾಗುತ್ತದೆ “ಅ ಅಗಸ, ಆ ಆನೆ, ಇ ಇಲಿ” ಅದರ ಜೊತೆಗೆ ಒಂದು ಎರಡು ಬಾಳೆಲೆ ಹರಡು ಎಂಬ ಒಕ್ಕೊರಲಿನ ರಾಗ ಕೇಳಿದೊಡನೆ ರಸ್ತೆಯಲ್ಲಿ ಹೊರಟವರು ಕೂಡ ಒಮ್ಮೆ ತಿರುಗಿ ನೋಡುತ್ತಾರೆ. ಹೊತ್ತು ಮದ್ಯಾಹ್ನಕ್ಕೆ ತಿರುಗಿದ್ದೇ ತಿಂಡಿಯ ಸಮಯ. ಎಳೆ ಬಾಳೆ ಸುಳಿಯಂತಹ ಕೈಗಳಿಂದ ಉಪ್ಪಿಟ್ಟು, ದೋಸೆ ತಿನ್ನಲು ನೆರವಾಗುತ್ತಾರೆ ಟೀಚರ್. ಡಬ್ಬಿಯ ಮುಚ್ಚಳ ತೆಗೆದು ಕೊಡಬೇಕು. ಟಣ್ಣನೆ ಡಬ್ಬಿ ಬೀಳಿಸಿಕೊಂಡವರಿಗೆ ಎತ್ತಿ ಕೊಡಬೇಕು. ಒಂದು ಮಗುವಿಗೆ ತಿನ್ನಿಸಿ, ಒಂದಕ್ಕೆ ಬಾಯಿ ಒರೆಸಿ, ಇನ್ನೊಂದಕ್ಕೆ ಕೈ ತೊಳೆಸಿ ಮುಗಿಸುವುದರಲ್ಲಿ ಶುರುವಾಗುತ್ತದೆ ಒಂದಕ್ಕೆ ಕಾರ್ಯಕ್ರಮ. ಮತ್ತೆ ಟೀಚರ್ ಓಡಬೇಕು. ಗುಂಡಿ ಬಿಚ್ಚಿಕೊಡು, ಲಾಡಿ ಕಟ್ಟಿಕೊಡು ಇತ್ಯಾದಿ. ಅಷ್ಟರಲ್ಲಿ ಅವನು ಬಿದ್ದ, ಇವನು ಹೊಡೆದ ಇತ್ಯಾದಿ ಜಗಳ-ರಗಳೆಗಳು ಶುರು. ಯಾಕೆಂದು ಕಾರಣವೇ ಗೊತ್ತಿಲ್ಲದೇ ಒಂದು ಅಳುತ್ತದೆ, ಒಂದು ಕೂಗುತ್ತದೆ. ಚೈತ್ರ ಮಾಸದ ಮಾಮರದಂತೆ ಸದಾ ಸದ್ದಿನ ಜಾತ್ರೆ ತುಂಬಿದ ಸ್ವರ್ಗದ ತುಣುಕು ಈ ಶಿಶುವಿಹಾರ. ಅವರ ಕೈ ಹಿಡಿದು ಅಳುತ್ತ ಅಂಗಳ ಇಳಿದ ಚಿಣ್ಣರೆಲ್ಲ ಅರಿವಿನ ಅರಮನೆಯ ನೂರು ಬಾಗಿಲುಗಳ ಬೀಗ ತೆರೆದು ಜ್ಞಾನದಾರೋಗಣೆಯಲ್ಲಿ ಸೀಕರಣೆ ಸುರಿದುಂಡು ದೊಡ್ಡ ಹುದ್ದೆಗಳ ಹೂ ಮಾಲೆಗೆ ಕೊರಳೊಡ್ಡಿದ್ದಾರೆ. ಅವರ ಮಾನ-ಸನ್ಮಾನದ ಕ್ಷಣಗಳಲ್ಲಿ ತಪ್ಪದೇ ಹೆತ್ತವರ ಹೆಸರು ಹೇಳಿ, ಕಾಲಿಗೆರಗಿ, ಗದ್ಗದಗೊಳಿಸಿ ಪಿತೃಋಣ ತೀರಿಸಿದ್ದಾರೆ. ರ್ಯಾಂಕು-ಮೆಡಲು ಹಿಡಿದುಕೊಂಡಾಗಲೆಲ್ಲ ನನಗೆ ಲೆಕ್ಕ ಕಲಿಸಿದವರು, ಸಾಹಿತ್ಯ ಓದಿಸಿದವರು ಅಂತ ತಮ್ಮ ಪ್ರಾಥಮಿಕ, ಮಾಧ್ಯಮಿಕ ಶಿಕ್ಷಕರ ಹೆಸರು ಹೇಳಿ ಪುಳಕಗೊಳಿಸಿ ಗುರುಋಣವನ್ನೂ ತೀರಿಸಿದ್ದಾರೆ. ಆದರೆ ತೀರಾ ಚಿಕ್ಕ ವಯಸ್ಸಿನಲ್ಲಿ ಎಲ್ಲವೂ ಮಂಜು ಮುಸುಕಿದಂತಹ ಬಾಲ್ಯದಲ್ಲಿ ನಡೆದದ್ದು ಯಾರಿಗೂ ನೆನಪಿರುವುದಿಲ್ಲ. ಆ ನಂತರ ನಮ್ಮ ತಂದೆ-ತಾಯಿಗಳು ನೀನು ಚಿಕ್ಕವನಿದ್ದಾ ಹಾಗಿದ್ದಿ, ಹೀಗಿದ್ದಿ ಅಂತೆಲ್ಲ ಹೇಳಿದ ಕತೆಗಳಿಂದ ನಮ್ಮ ನಸ್ಮರಣೆಯ ಜಗತ್ತು ತುಂಬಿಕೊಳ್ಳುವಾಗ ಈ ಬಡಪಾಯಿ ಶಿಶುವಿಹಾರದ ಶಿಕ್ಷಕಿಗೆ ಯಾವ ಪಾತ್ರವೂ ಇರುವುದಿಲ್ಲ. ಪಾಪ ಇವರೆಲ್ಲ ಸರ್ಕಾರಿ ನಿಯುಕ್ತಿ-ಸಂಬಳ-ಸವಲತ್ತುಗಳನ್ನು ಕಂಡವರಲ್ಲ. ಹೆಚ್ಚಿನ ವಿದ್ಯೆಯೂ ಇಲ್ಲದ, ದೊಡ್ಡ ಕನಸುಗಳೂ ಇಲ್ಲದ ಈ ಬಡಜೀವಿಗಳು ಯಾರಿಂದ ಏನನ್ನೂ ನಿರೀಕ್ಷಿಸದೇ ತಮ್ಮ ಹೊಟ್ಟೆಪಾಡಿನ ಕೆಲಸವನ್ನು ತುಂಬಾ ಅಚ್ಚುಕಟ್ಟಾಗಿ ಮಾಡುತ್ತಿರುತ್ತಾರೆ. ಶಿಕ್ಷಕ ದಿನಾಚರಣೆಯಾಗಲೀ, ಶಿಕ್ಷಣ ಇಲಾಖೆ ಕೊಡುವ ಆದರ್ಶ ಶಿಕ್ಷಕ ಪ್ರಶಸ್ತಿಯಾಗಲೀ ಇವರಿಗೆ ಬಾನೆತ್ತರದ ನಕ್ಷತ್ರ. ತಮ್ಮ ಎದುರಿಗಿನ ಮಗುವಿನಿಂದಲೂ ಇವರು ಒಂದು ದಿನವೂ ನಮಸ್ತೆ ಟೀಚರ್ ಅಂತ ಅನ್ನಿಸಿಕೊಂಡಿರುವುದಿಲ್ಲ. ಸರಿಯಾಗಿ ಮಾತಾಡಲು ಬರದಿರುವ ವಯಸ್ಸಿನಲ್ಲಿ ಎತ್ತಿ ಆಡಿಸಿದ ಈ ಅಮ್ಮನಲ್ಲದ ಅಮ್ಮಂದಿರನ್ನು ಯಾರು ಎಷ್ಟು ನೆನಪಿಟ್ಟುಕೊಂಡಿರುತ್ತಾರೆ? ಪೊಮೊಶನ್, ಟ್ರಾನ್ಸಫರ್ ಇಂತಹುದು ಏನೊಂದೂ ಇಲ್ಲದ ಅವರು ಅದೇ ನಾಲ್ಕು ಗೋಡೆಗಳ ನಡುವೆ ಚಿಣ್ಣರೆದುರು ಕುಣಿಯುತ್ತಲೇ ಮುದುಕರಾಗುತ್ತಾರೆ. ಕೆಲವು ಕಡೆ ತಾಯಿಗೆ ಕಲಿಸಿದ ಟೀಚರ್ ಮಗಳಿಗೂ ಕಲಿಸುತ್ತಾರೆ. ಅಲ್ಪ ಸಂಬಳದ, ಸವಲತ್ತು ರಹಿತ ಟೀಚರು ಅಕ್ಕರೆಯಿಂದ ಕೈ ಹಿಡಿದು ಅಕ್ಷರ ಜಗತ್ತಿಗೆ ನಮ್ಮನ್ನು ಪರಿಚಯಿಸಿದ ಜಾಗ ನಮ್ಮ ಸ್ಮರಣೆಯಲ್ಲೇ ಇರುವುದಿಲ್ಲ. ತಮ್ಮ ತಾಯಂದಿರ ಸೆರಗಲ್ಲಿ ಮುಖ ಮರೆಸಿಕೊಂಡ ಮಗುವನ್ನು ಹಗೂರಕೆ ಎತ್ತಿಕೊಂಡು ಹಾಡು, ಹಕ್ಕಿ, ಆಟ, ಪಾಠಗಳ ಕಲಿಕೆಯ ರುಚಿ ತೋರಿಸುತ್ತ ಬೆಳವಣಿಗೆ ದಾರಿಯಲ್ಲಿ ಮೊದಲ ಹೆಜ್ಜೆ ಹಾಕಿಸಿದ ತಾಣವಿದು. ಅಮ್ಮನ ಸೆರಗಿನಾಚೆಗೂ ಒಂದು ಜಗತ್ತಿರುತ್ತದೆ ಎಂಬ ಸತ್ಯವನ್ನು ಅರಿವಿನ ಆಲ್ಬಂ ದಲ್ಲಿ ಮೂಡಿಸಿದ ಜಾಗ. ಇಲ್ಲಿ ಅತ್ತು ಇವರ ಸೆರಗಲ್ಲಿ ಕಣ್ಣೊರೆಸಿಕೊಂಡ ಮಗು ಶಾಲೆ-ಕಾಲೇಜು-ವಿಶ್ವವಿದ್ಯಾಲಯ ಎಂದು ಆಕಾಶದ ಅನಂತದಲ್ಲಿ ಹಾರಾಡುತ್ತಿದ್ದರೆ ಈ ಟೀಚರ್ ಇನ್ನೂ ಇಲ್ಲೇ ಬಾ ಬಾ ಗಿಳಿಯೇ ಬಣ್ಣದ ಗಿಳಿಯೇ ಎಂದು ಕುಣಿಯುತ್ತಿದ್ದಾರೆ. ಅಳುವ ಕಂದನನ್ನು ಸೊಂಟಕ್ಕೆ ಸಿಗಿಸಿಕೊಂಡು ಗೇಟಿನ ಹತ್ತಿರ ಕರೆಯುತ್ತಿದ್ದಾರೆ. “ಬಾರೆ ಪುಟ್ಟೂ, ಶಾಲೆಗೆ ಹೋಗ್ವಾ” ಶಿಕ್ಷಕರ ಸ್ನ್ಮಾನ ಪಟ್ಟಿಯಲ್ಲಿ ಹೆಸರೇ ಇಲ್ಲದ ಆ ಎಲ್ಲ ಮುಗ್ಧ ಅಮ್ಮನಂತಹ ಶಿಕ್ಷಕಿಯರಿಗೆ ಹೃದಯ ತುಂಬಿದ ಅಕ್ಷರ ನಮನಗಳು. **********************************

ಅಮ್ಮನ ಸೆರಗ ಬಿಡಿಸಿದ ಬೆರಳುಗಳು Read Post »

ಇತರೆ, ಲಹರಿ

ಭರವಸೆಯ ಹೊರತು ಬೇರೇನೂ ಉಳಿದಿಲ್ಲ’

ಲಹರಿ ಭರವಸೆಯ ಹೊರತು ಬೇರೇನೂ ಉಳಿದಿಲ್ಲ’ ವಸುಂಧರಾ ಕದಲೂರು                             ಕವಚಿ ಹಾಕಿದ್ದ ಖಾಲಿ ಮಂಕರಿಯನ್ನು ಬೋರಲಾಕಿದಂತೆ, ಎಲ್ಲಾ ಖಾಲಿಖಾಲಿಯಾದ ಭಾವ. ಹಾಗೆಂದು ನಿರಾಳ ಅಂತೇನಲ್ಲ. ಮನಸ್ಸು ಭಾರವಾಗಿದೆ. ಏನೆಲ್ಲಾ ಇದೆ. ಆದರೂ ಏನೇನೂ ಇಲ್ಲ ಎನ್ನುವ ಒಂಟಿತನ ಹಿಂಡಿಹಿಪ್ಪೆ ಮಾಡುತ್ತಿದೆ. ಬಿಸಿಲಿಗೆ ಒಣ ಹಾಕಿದ ಬಟ್ಟೆ ಒಣಗೀ ಒಣಗೀ ಅಲ್ಲೇ ಇದ್ದು ಕೊನೆಗೆ ಬಣ್ಣಗೆಟ್ಟಂತೆ…      ಸದಾ ಗಿಜಿಗಿಜಿ ಗಜಿಬಿಜಿಯಲ್ಲಿ ಸುತ್ತಾಡುತ್ತಿದ್ದ ಮೈ ಮನಸ್ಸೆಲ್ಲಾ ಒಂದು ಕ್ಷಣಕ್ಕೆ  ಥಟ್ ಎಂದು ಏಕಾಂತ ವಾಸಕ್ಕೆ ಹೋಗಿ ನಿರ್ಜನ ಕಾಡ ಮಧ್ಯದಲ್ಲಿ ವಿರಮಿಸಿದಂತೆ ಭಾಸವಾಯಿತು. ಆಹಾ.!! ಇದೇ ಬೇಕಾಗಿತ್ತು ನನಗೆ ಎನಿಸಿ ಎಷ್ಟು ಖುಷಿಪಟ್ಟಿತೋ ಮನಸ್ಸು ಗೊತ್ತಿಲ್ಲ. ಆದರೆ ದಿನ ಕಳೆದ ಮೇಲೆಯೇ ಗೊತ್ತಾದದ್ದು ಅದು ವಿಶ್ರಮಿಸುವ ಏಕಾಂತವಲ್ಲ ಭಯ ಹುಟ್ಟಿಸುವ ಸೆರೆವಾಸದ ನರಕವೆಂದು.       ಏನೇನೋ ಕಸರತ್ತುಗಳು. ಸಮಾಧಾನಕ್ಕೆ, ಸ್ಫೂರ್ತಿಗೆ, ಭರವಸೆಗೆ ಯತ್ನಿಸುತ್ತಾ ನಾನೂ ನನ್ನವರೂ ಹೀಗೆ ಎಲ್ಲರನ್ನೂ ಹುರಿದುಂಬಿಸಲು ಪ್ರಯತ್ನಿಸುತ್ತಲೇ ಇರುವುದು.     ಇದೇ ಸರಿಯಾದ ಸಮಯ. ನಿನ್ನೊಳಗೆ ನೀನೇ ಇಣುಕಿ ನೋಡು. ನೀನು ಯಾರೆಂಬುದೇ ಮರೆತಿದ್ದೆಯಲ್ಲಾ. ಮನೆ, ಮಕ್ಕಳು, ಮನೆಯವರು… ಇನ್ನಾದರೂ ಗಮನಕೊಡು. ಆಂತರ್ಯದ ಕೂಗು ಇನ್ನಿಲ್ಲದಂತೆ ಎಬ್ಬಿಸಲು ಪ್ರಯತ್ನಿಸಿತು. ಹೌದು ನಿಜ. ನಮ್ಮ ಬದುಕು ಈಗ ಮತ್ತೆ ನಮಗೇ ಸಿಕ್ಕಿದೆ. ನಮ್ಮ ಇಷ್ಟದ ತಿನಿಸು, ಮನೆಯವರಿಷ್ಟದ ಉಣಿಸು, ಸಿನೆಮಾ, ಪುಸ್ತಕ…     ಇಷ್ಟಯೇ… ಸಾಕೇ..?!    ಇಲ್ಲ, ಸ್ನೇಹವಿಲ್ಲದೇ, ಸುತ್ತಾಟವಿಲ್ಲದೇ ಇರಲಾಗದು, ಇರಲಾಗದು. ನಾವೇನು ಹಳೆಯ ಕಾಲದವರೇ? ಹೊಲ -ಮನೆ ತೋಟ-ತುಡಿಕೆ ಎಂದು ದಿನ ಮುಗಿಸಲು? ನಗರದಲ್ಲಿ ವಾಸಿಸಲು ಬಂದ ಮೇಲೆ ಗದ್ದೆ ತೋಟಗಳ ಮಾತಾದರೂ ಎಲ್ಲಿಂದ ಬರಬೇಕು? ಪ್ರತಿ ದಿನವೂ ಎಂಟರಿಂದ ಹತ್ತು ಗಂಟೆ ಕಾಲ ಮನೆಯ ಹೊರಗೇ ಕಾಲನ್ನು ಇಟ್ಟವರು ನಾವು. ಈಗ ಕಾಲಿನ ಚಲನೆಯೂ ಇಲ್ಲದಂತೆ, ಕಾಲದ ಚಲನೆಯೂ ಕಾಣದಂತೆ ಉಳಿದುಬಿಡುವುದು ಹೇಗೆ ಸಾಧ್ಯ?     ಎಷ್ಚೆಂದು ಟಿ.ವಿ ನೋಡುವುದು? ಪುಸ್ತಕ ಸಾಂಗತ್ಯ ಮಾಡುವುದು? ಮನೆ ಮಂದಿಯೊಡನೆ ಹರಟುವುದು?  ಅವರಿಗೂ ಬೇಸರವೇ…    ಮಕ್ಕಳಂತೂ ಜೊತೆಗಾರರಿಲ್ಲದೆ ಮೊಬೈಲ್, ಲ್ಯಾಪ್ಟಾಪು, ಟಿ.ವಿ. ಗಳ ಸಾಂಗತ್ಯದಲ್ಲಿ  ರೊಬೋಟುಗಳೇ ಆಗಿಬಿಡುತ್ತಾರೇನೋ ಎಂಬ ಆತಂಕ. ಮಡದಿಯೊಡನೆ ಹೇಳಿಕೊಳ್ಳಲಾರದ ಆಡಲಾರದ ಮಾತುಗಳಿಗೆ ಗಂಡನಿಗೆ ಗೆಳೆಯನ ಕಿವಿ ಬೇಕು. ಹೃದಯದ ಸಾಂತ್ವಾನಕೆ ಸ್ನೇಹದ ಕೈ ಕುಲುಕುವಿಕೆ ಬೇಕು. ಪತಿಯನ್ನು ಪ್ರತಿ ದಿನವೂ ಕೆರಳಿಸಲಾಗದೆ, ಅರಳಿಸಲಾಗದೆ, ಸಮಾಧಾನಿಸಲಾಗದ ಹೆಂಡತಿಯ ಸಂಕಟಕೆ ಸ್ನೇಹಿತೆ ಬೇಕು. ಆಕೆಯೊಡನಾಡುವ ನಾಕಾರು ಮಾತುಗಳು, ಹೊಸ ಪಾಕದ ಪಾಠ, ತವರು, ನೆಂಟರಿಷ್ಟರ ಮನೆ, ಕಾರ್ಯಕ್ರಮ, ಸಂಭ್ರಮ ನಲಿವು , ಧಾರಾವಾಹಿಯ ಕಂತುಗಳ ಕುರಿತ ವಿಮರ್ಶೆ, ಬಿರುಸಾಗಿ ಪಾರ್ಕುಗಳಲ್ಲಿ ಒಂದರ್ಧ ಗಂಟೆ ಸುತ್ತಾಡುವ ಸ್ವಾತಂತ್ಯ್ರ ಮತ್ತೆ ಇವೆಲ್ಲವೂ ಅವಶ್ಯ ಬೇಕು.        ಪ್ರತಿ ದಿನವೂ ಕೈ ಗಾಡಿಯಲಿ ಸೊಪ್ಪು ತರಕಾರಿ ಹಣ್ಣುಗಳನ್ನಿಟ್ಟುಕೊಂಡು ಕುಳಿತಿರುತ್ತಿದ್ದ ಅಜ್ಜನೋ, ಯುವಕನೋ, ಅಕ್ಕ – ತಂಗಿಯಂತಹವರೋ ತಮ್ಮತಮ್ಮ ಊರದಾರಿ ಹಿಡಿದಿದ್ದಾರೆ. ಅವರಿಗಲ್ಲಿ ಏನಾಗಿದೆಯೋ..? ಪ್ರತಿದಿನದ ಒಂದು ಸಣ್ಣ ನಗೆಯ ವಿನಿಮಯ ಈಗ ಕಡಿತಗೊಂಡಿದೆ. ಮೊಬೈಲ್ ನಂಬರೂ ಪಡೆದಿಲ್ಲ. ದಿನಂಪ್ರತಿ ಸಿಗುವ ಭರವಸೆಯಿದ್ದಾಗ ಮೊಬೈಲ್ ನಂಬರ್ ಪಡೆದು ದೂರಕರೆ ಮಾಡುವ ಜರೂರೇನಿತ್ತು?           ವಾರಕ್ಕೊಮ್ಮೆ ಹೆಚ್ಚು ಖಾರ, ಈರುಳ್ಳಿ, ಕ್ಯಾರೆಟ್ಟು ಹಾಕಿಸಿಕೊಂಡು ತಿನ್ನುತ್ತಿದ್ದ ಮೈಸೂರು ಚುರುಮುರಿಯವನ ಗಾಡಿಯ ಸದ್ದು ಈಗ ಅಡಗಿ ಹೋಗಿದೆ.     ದಿನಪತ್ರಿಕೆಗಳ ಜೊತೆಗೆ ಬರುತ್ತಿರುವ ಜಾಹೀರಾತುಗಳಲ್ಲಿ ಒಂದು ಕರೆ ಮಾಡಿದರೆ ಸಾಕು ಅರ್ಧ ಗಂಟೆಯೊಳಗೆ ನೀವು ಬಯಸಿದ್ದೆಲ್ಲಾ ಮನೆ ಬಾಗಿಲಿಗೆ ಬಂದು ಡೆಲಿವರಿಯಾಗುತ್ತದೆ ಎಂಬುದನ್ನು ನೋಡೀ ನೋಡೀ ಸಾಕಾಗಿದೆ.      ಮನೆಗೆ ಸ್ನೇಹಿತರನ್ನೂ ಬಂಧುಗಳನ್ನೂ ಆರ್ಡರ್ ಮಾಡಿಸಿ ತರಿಸಿಕೊಳ್ಳಬಹುದೇ….?! ಕಾಲ ಇಷ್ಟು ನಿರ್ದಯಿಯಾಗಿ ಹೀಗೆ ಎಲ್ಲವನ್ನೂ ಕಡಿತ ಮಾಡಬಾರದಿತ್ತು… ನಿಜ, ಆದರೆ ಈಗ ಭರವಸೆಯ ಹೊರತು ಬೇರೇನೂ ಉಳಿದಿಲ್ಲ.  *******************************************

ಭರವಸೆಯ ಹೊರತು ಬೇರೇನೂ ಉಳಿದಿಲ್ಲ’ Read Post »

You cannot copy content of this page

Scroll to Top