ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಕೊಂಕಣಿ ಕವಿ ಪರಿಚಯ

ಲೇಖನ ಕೊಂಕಣಿ ಕವಿ ಪರಿಚಯ  ಮೆಲ್ವಿನ್ ಕಾವ್ಯನಾಮ : ಮೆಲ್ವಿನ್ ರಾಡ್ರಿಗಸ್. ಬಿಬಿಮ್ ಓದಿನ ನಂತರ ಸೋಷಿಯೋಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಮೆಲ್ವಿನ್ ಅವರು ಕರಾವಳಿಯ ಪ್ರಸಿದ್ಧ “ದಾಯ್ಜಿ ವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾಗಿದ್ದಾರೆ. ಸಾಹಿತ್ಯ ಸೇವೆಯಲ್ಲಿ ಇವರಿಗೆ ದೊರೆತ ಪ್ರಶಸ್ತಿಗಳು ಅಪಾರ. ಕೊಂಕಣಿ ಭಾಷಾ ಮಂಡಲ್ ಗೋವಾ (1989) ಕೊಂಕಣಿ ಕುಟುಂಮ್, ಬೆಹರೈನ್ (2006) ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುರಸ್ಕಾರ (2006). ಡಾಕ್ಟರ್ ಟಿ.ಎಮ್.ಎ ಪೈ ಫೌಂಡೇಶನ್ ಉತ್ತಮ‌ಕೊಂಕಣಿ ಪುಸ್ತಕ ಪ್ರಶಸ್ತಿ.(2009) ಸಾಹಿತ್ಯ ಅಕಾಡೆಮಿ ಪ್ರಶಸ್ತಿ(2011) ವಿಮಲಾ ಪೈ ವಿಶ್ವಕೊಂಕಣಿ ಕವಿತಾ ಪ್ರಶಸ್ತು (2016). ಇವರ ಕೆಲವು ಕೃತಿಗಳು. ಮೊಗಾಪೆಳೊ – 1988; ಫಿಂತಾಂ – 2000 ವಾಟ್ – 2003 ಪ್ರಕೃತಿಚೊ ಪಾಸ್ – 2008 & 2019 ವಿಂಚ್ಣಾರ್ ಕವಿತಾ – 2012 ದೇವಿ ನಿನ್ಕಾಸಿ – 2015; ಉಗ್ತೇಂ ದಾರ್ – 2018 ( ಕೆ, ಎಸ್ ನರಸಿಂಹಸ್ವಾಮಿಯವರ “ತೆರೆದ ಬಾಗಿಲು” ಕವಿತೆಯ ಕೊಂಕಣಿ ಅನುವಾದ. ನಿಮಗಾಗಿ ಅವರ ಎರಡು ಕವಿತೆಗಳು ಕನ್ನಡ ಅನುವಾದದೊಂದಿಗೆ. ಪಾಂಚ್ ಬಾಯ್ಲಾಂಚೊ ದಾದ್ಲೊ ಹಾಂವ್ ಸದಾಂಯ್ ಚಿಂತಾಲೊಂ – ಹೊ ದಾದ್ಲೊ ಕಸೊ ಆಪ್ಲ್ಯಾ ಪಾಂಚ್ ಬಾಯ್ಲಾಂಕ್ ಆಟಾಪುನ್ ಆಸಾ ಎಕಾಚ್ ಘರಾಂತ್! ಹಾಂವೆಂ ತಾಚ್ಯಾ ಘರಾಕ್ ಕಾನ್ ದಿಲೆ. ಗೊಮ್ಟಿ ಚಿರ್ಡಿತಾನಾ ಭಾಯ್ರ್ ಯೇಂವ್ಕ್ ಉಸ್ಮಡ್ಚ್ಯಾ ಉಸ್ವಾಸಾಚ್ಯಾ ಆಕ್ಲಾಸಾಚ್ಯೊ ಬೋಬೊ! ಇನ್‌ಕ್ವಿಜಿಸಾಂವಾಚ್ಯಾ ಕಾಳಾರಯ್ ಅಶ್ಯೋಚ್ ಆಸ್ತಾಲ್ಯೊ ಕೊಣ್ಣಾ! ಜಶೆಂ- ಮಧ್ಯಾನ್ ರಾತಿಚ್ಯಾ ಮೊನೆಪಣಾಂತ್ ತಡಿಕ್ ಮಾರ್‍ಚ್ಯಾ ಲ್ಹಾರಾಂಚಿ ಗಾಜ್- ತಸಲಿ ಉಚಾಂಬಳಾಯ್! ಕಾಂಯ್ ನಿದುನ್ ಆಸಲ್ಲೆ ಬಾಯ್ಲೆಚ್ಯಾ ಘಾಗ್ರ್ಯಾಕ್ ಉಜೊ ದಿಲ್ಯಾರ್ ಜಾವ್ಯೆತಾ ತಸಲಿ! ಬೋವ್‌ಶ್ಯಾ ಕೆಸ್ಟ್ಯಾಂಕ್ ಧರ್ನ್ ವಣ್ಟಿಕ್ ಆಪ್ಟಿತಾನಾ ಜಾಂವ್ಚೆ ಕಾಂಪ್ಣೆಕ್ ಥರ್ಥರ್‍ಚ್ಯಾ ಪಾಕಾಸಾಂ ವಯ್ಲ್ಯಾ ನಳ್ಯಾಂಚೆ ಕಾಂಪೆರೆ…. ಹಾಂವೆಂ ಮ್ಹಜೆಂ ದಾರ್ ಉಗ್ತೆಂ ಕೆಲೆಂ! ಪಯ್ಲೆಚ್ಯಾ ಹಾತಾಂತ್ ಮುಸಾಳ್ ದುಸ್ರೆಚ್ಯಾ ಹಾತಾಂತ್ ಬಯ್ತಾಡ್ ಎಕ್ಲಿ ಘುಂವ್ಡಾವ್ನ್ ಆಸಾ ಪೆಂಕ್ಟಾದಾಬ್ ಆನ್ಯೇಕ್ಲಿ ಮೆಳಲ್ಲ್ಯಾಂಚಿಂ ಮಾಸಾಂ ಚಾಬ್ ಉರಲ್ಲಿ ಶಿಂಪ್ಡಾವ್ನ್ ಆಸಾ ಮಿರ್‍ಸಾಂಗೆ ಪಿಟಿ ಆಂಗ್ಣಾಂತ್ ಮ್ಹಾಭಾರತ್ ಲಾಯ್-ಲುಟಿ, ಖೊಂಟೊ ಮುಟಿ. ಕಾಲ್ ತೊ ಪಾಂಚ್ ಬಾಯ್ಲಾಂಕ್ ಎಕಾಚ್ ಘರಾಂತ್ ಘೆವ್ನ್ ರಾಂವ್ಚೊ ದಾದ್ಲೊ ಮೆಳ್ಳೊ. ಕಿತೆಂ ಸಾಂಗುಂ! ಖರೋಚ್ ತೊ ಮ್ಹಾಕಾ ಪಾಂಚ್ ಲಿಪಿಂಕ್ ಪೊಟ್ಲುನ್ ಧರಲ್ಲೆ ಕೊಂಕ್ಣಿಬರಿ ದಿಸ್ಲೊ! -ಮೆಲ್ವಿನ್ ರೊಡ್ರಿಗಸ್ ಐದು ಹೆಂಡಿರ ಗಂಡ. ನಾನು ಸದಾ ಯೋಚಿಸುತಿದ್ದೆ.. ಈ ಗಂಡಸು ಹೇಗೆ ತನ್ನ ಐದೂ ಹೆಂಡತಿಯರನ್ನು ಸಂಭಾಳಿಸುತಿದ್ದಾನೆ ಅದು ಕೂಡ ಒಂದೇ ಮನೆಯೊಳಗೆ! ನಾನು ಅವನ ಮನೆಗೆ ಕಿವಿ ಹಚ್ಚಿದೆ. ಕತ್ತು ಹಿಸುಕುವಾಗ ಹೊರ ಬರಲು ಚಡಪಡಿಸುವ ಉಸಿರಿನ ಅಸಹಾಯಕ ಚೀರುವಿಕೆ. ಇನ್‍ಕ್ವಿಸಿಷನ್ ಕಾಲದಲ್ಲೂ ಹೀಗೆಯೇ ಇದ್ದಿತ್ತೇನೋ! ಹಾಗೇ- ಮಧ್ಯರಾತ್ರಿಯ ಮೌನದೊಳಗೆ ದಡವನ್ನು ಅಪ್ಪಳಿಸುವ ಅಲೆಗಳ ಭೋರ್ಗರೆತದ ಮೊರೆತ ಮಲಗಿದ್ದ ಹೆಂಡತಿಯ ಬಟ್ಟೆಗಳಿಗೆ ಉರಿ ಹಚ್ಚಿದಂತೆ. ಬಹುಶಃ ಜುಟ್ಟು ಹಿಡಿದು ತಲೆಯನ್ನು ಗೋಡೆಗೆ ಅಪ್ಪಳಿಸುವಾಗಿನ ಅದುರುವಿಕೆಗೆ ನಡುಗುವ ತೊಲೆಗಳ ಮೇಲಿನ ಹೆಂಚುಗಳ ನಡುಕ. ನಾನು ನನ್ನ ಬಾಗಿಲನ್ನು ತೆರೆದಿಟ್ಟೆ. ಒಬ್ಬಳ ಕೈಯಲ್ಲಿತ್ತು ಒನಕೆ ಮತ್ತೊಬ್ಬಳ ಹಿಡಿಯಲ್ಲೊಂದು ಕೋಲು. ಇನ್ನೊಬ್ಬಳು ತಿರುಗಿಸುತಿದ್ದಳು ಛಾಟಿಯಂತಹುದೇನನ್ನೋ ಸಿಕ್ಕಿದವರ ಮಾಂಸವನ್ನೇ ಕಚ್ಚಲು ತಯಾರಾಗಿದ್ದ ಮಗದೊಬ್ಬಳು. ಇನ್ನು ಉಳಿದವಳು ಮೆಣಸಿನ ಪುಡಿ ಎರಚುತಿದ್ದಳು. ಅಂಗಳದೊಳಗೆ ಮಹಾಭಾರತ ಜಗಳ- ಕದನ ಮಾರಾಮಾರಿ. ನಿನ್ನೆ.. ಐದು ಜನ ಪತ್ನಿಯರ ಜೊತೆ ಒಂದೇ ಮನೆಯಲ್ಲಿ ವಾಸಿಸುತ್ತಿರುವ ಆ ಗಂಡಸು ಎದುರಾದ. ಏನೆಂದು ಹೇಳಲಿ..! ನನಗೆ ಅವನು ಪಕ್ಕಾ ಐದು ಲಿಪಿಗಳನ್ನು ಅಪ್ಪಿಕೊಂಡ ಕೊಂಕಣಿ ಭಾಷೆಯಂತೆಯೇ ಕಂಡ. ಕನ್ನಡಕ್ಕೆ: ಶೀಲಾ ಭಂಡಾರ್ಕರ್. ಝುಜ್     ವಾಜಪೇಯಿ ಆನಿ ಆಡ್ವಾಣಿಚ್ಯಾ ಕದೆಲಾಂಚೊ         ಏಕ್ ಪಾಯ್             ಆಪ್ಲ್ಯಾ ಉತ್ರಾಂನಿ ಮೊಡುನ್                 ಮುಶಾರ್ರಫಾಚ್ಯೆ ಮಿಲಿಟರಿ ಫವ್ಜೆಚಿ                     ತೋಖ್ಣಾಯ್     ಕರ್‍ತಾಂ, ಭಾರತಾಕ್ ಬೆಂಡುನ್         ದಾವ್ಯಾ ಹಾತಾನ್ ಖಾಡ್ಕಿ ಉಕ್ಲುನ್             ಉಜ್ವ್ಯಾ ಹಾತಾನ್ ವಾಕೊರ್ ಧರುನ್                 ಹೊ ಪಾಕಿಸ್ತಾನಿ ಕೆಲ್ಸಿ                     ಮ್ಹಜ್ಯಾ ಗಳ್ಯಾಲಾಗ್ಚೆಂ ಖಾಡ್ ಕಾಡ್ತಾ!     ಪಾಕಿಸ್ತಾನಿ ಸೊಜೆರಾಂಚ್ಯಾ ಹಾತಾಂತ್         ಸಾಂಪ್ಡಾಲ್ಲ್ಯಾ             ಭಾರತೀಯ್ ಸೊಜೆರಾಚಿ ಕಾಂಪ್                 ಮ್ಹಜ್ಯಾ ಶಿರಾಂನಿ!                     ಖಿಣಾಕ್ ಸೊಜೆರಾಚೊ ಆವ್ತಾರ್ ಜಾವ್ನ್                         ಗಳೊ ಕಾಪಿತ್ ಕೊಣ್ಣಾ                             ಮ್ಹಳ್ಳಿ ಭಿರಾಂತ್!     ರಾತ್ ಇಕ್ರಾಂಕ್ ತೆಂಕ್ಲ್ಯಾ         ಸೆಲುನಾಂತ್             ಆಮ್ಚ್ಯಾ ದೊಗಾಂವಿಣೆಂ ತಿಸ್ರೊ ನಾ                 ದಾವೊ ದೊಳೊ ತಿರ್‍ಸೊ ಕರುನ್                     ಸೆಲುನಾಂತ್ಲ್ಯಾ ಆರ್‍ಶಾಭಾಯ್ರ್                         ಜನೆರಾಚ್ಯಾ ಹಿಂವಾಂತ್ಲೊ                             ನಿದೊಂಕ್ ಗೆಲ್ಲೊ, ದುಬಾಯಾಂತ್ಲೊ     ಮಾರೊಗ್ ದೆಖ್ತಾನಾ         ಕಾರ್‍ಗಿಲ್ ದೊಂಗ್ರಾವಯ್ಲ್ಯಾ ಕುಲ್ಕುಲ್ಯಾಂತ್‌ಯ್             ಝುಜ್‌ಲ್ಲ್ಯಾ ಸೊಜೆರಾಂಬರಿ                 ಗೊಮ್ಟ್ಯಾಚ್ಯೊ ಕಾತಿ                     ವಾಕೊರಾಚ್ಯೆ ಧಾರಿಲಾಗಿಂ                         ಝುಜ್ತಾತ್ ಭೊಗ್ತಾ     ಹಾಂವ್ ‘ಮಲ್ಬಾರಿ’ ಯಾ ‘ಮದ್ರಾಸಿ’         ತೊ ವಿಚಾರ್‍ತಾ:             ‘ಮಂಗ್ಳುರಿ’ ಮ್ಹಜಿ ಜಾಪ್.                 ‘ಆಮ್ಚಿಂ ಮಿಸ್ಸಾಯ್ಲಾಂ ಆತಾಂ                     ವಯ್ರ್‌ಥಾವ್ನ್ ಸಕಯ್ಲ್‌ಪಾಸೂನ್     ತುಮ್ಚ್ಯಾ ಕೇರಳಾಚಿಂ ಸಯ್ತ್ ಖಿಮಾಂ         ಕರ್‍ಚ್ಯೆ ತಾಕ್ತೆಚಿಂ’             ತೊ ಮ್ಹಜ್ಯೆ ಗೊಮ್ಟೆಚಿ ಕಾತ್                 ವೋಡ್ನ್ ಧರ್‍ನ್ ಉರ್‌ಲ್ಲಿಂ ಖಾಡಾಚಿಂ                     ಥೊಡಿಂ ಮುಳ್ಕಾಟಾಂ ಖರ್‍ವಟಾಯ್ತಾ     ‘ಸಗ್ಳೆಂ ಕಾಶ್ಮೀರ್ ಆಮ್ಚೆಂ         ಹೊ ಕಂಟ್ರೋಲಾಚೊ ಗೀಟ್ ವೊಡ್ಲಾ ದೆಕುನ್             ಆಕಾಂತ್‌ವಾದಾಚೆಂ ಪೀಟ್                 ಫುಗನಾಸ್ತಾಂ ರಾವ್ತಾ?’                     ಮದೆಂ ಮದೆಂ ಉರ್ದುಂತ್     ಗಾಳಿ ದೀವ್ನ್ ಆಸ್‌ಲ್ಲೊ ಕೆಲ್ಸಿ, ಎಕಾನೇಕ್         ‘ಬುಲ್‌ಶಿಟ್’ ಮ್ಹಣೊನ್             ದಾರ್ ಉಗ್ಡೊನ್ ಭಾಯ್ರ್ ಥಿಂಪಿ ಥುಕ್ತಾ     ಓಲ್ಡ್‌ಸ್ಪಾಯ್ಸಾಚೆ ಥೊಡೆ ಥೆಂಬೆ         ಮ್ಹಜ್ಯಾ ಗಾಲಾಂಚೆರ್ ಪುಸ್ತಾನಾ             ಜಾಂವ್ಚ್ಯಾ ಹುಲೊಪಾನ್                 ಲಾಹೋರ್ ಸೊಲ್ಲ್ಯಾಚಿಂ ಕೊಸಾಳ್‌ಲ್ಲಿಂ ರುಪಾಂ                     ಮ್ಹಜ್ಯಾ ದೊಳ್ಯಾಂ ಸಾಮ್ಕಾರ್ ಕುಪಾಂ                         ಜಾವ್ನ್ ಮಾಂಡ್ತಾತ್     ‘ಆಮಿ ಬೋರ್ಡರಾವಯ್ಲೆ ಮನಿಸ್         ಇಂಡಿಯಾಚ್ಯಾ ಗುಳ್ಯಾಂಕ್             ಆಮ್ಚೆ ಸಂಬಂಧ್ ತುಟ್ತಾತ್                 ಕಾಳ್ಜಾಂ ಫಾಳ್ತಾತ್                     ಆನಿ ಕುಟ್ಮಾಂ ಕೊಸಾಳ್ತಾತ್                         ತರಿ ಆಮಿ     ಭಿಯಾನ್ ನಿದನಾಂವ್         ಆಮಿ ರಗ್ತಾಂತ್ ನ್ಹಾತಾಂವ್             ಆನಿ ಹರ್‍ಯೆಕಾ ಮನ್ಶಾಸಂಬಂಧಾ ಮಧೇಂಯ್                 ಉಣ್ಯಾರ್ ಎಕ್ಯೆ ಬೊಂದುಕೆಕ್ ಜಾಗೊ ದಿತಾಂವ್                     ಮ್ಹಜ್ಯಾ ಸಾತ್ ವರ್‍ಸಾಂಚ್ಯಾ     ಫಾತಿಮಾಚೊ ಅತ್ಮೊ         ಬೋರ್ಡರಾಚೆರ್ ಪಾಸಾಯೊ ಮಾರ್‍ತಾ         ಆನಿ ಆಮ್ಚೆಕುಶಿಂ ಉಸಾಳ್ಚ್ಯಾ             ಗುಳಿಯಾಂಚಿ ದಿಶಾ ಬದ್ಲಿತಾ                     ತಶೆಂ ಆಮಿ                         ಭಿರಾಂತೆವಿಣೆಂ ಭೊಂವ್ತಾಂವ್’     ಧಾರುಣ್ ಲೆಕ್‌ಲ್ಲ್ಯಾ ಕೆಲ್ಸಿಚೆಂ         ಕಾಳೀಜ್ ಲೊಣಿಯೆಬರಿ ಕಡ್ತಾ             ಆನಿ ದೊಳ್ಯಾಂತ್ಲೆಂ ಏಕ್ ದೂಕ್                 ಝಡೊನ್ ಮ್ಹಜ್ಯಾ ಆಂಗಾರ್                     ಪಾಂಗರ್‌ಲ್ಲ್ಯಾ ವಸ್ತ್ರಾಚೆರ್ ಇರ್‍ತಾ     ಮ್ಹಜ್ಯಾ ಗಾಲಾಂಚೆರ್         ‘ನೀವಿಯಾ ಕ್ರೀಮ್’ ಮಾಖ್ತಾನಾ             ತಾಚ್ಯಾ ತಳಾತಾಭಿತರ್                 ಕಾಂಪ್ಚ್ಯಾ ಶಿರೆಂಚೊ ಶಿರ್‍ಶಿರೊ                     ಮ್ಹಜ್ಯಾ ಗಾಲಾಂಚ್ಯೆ ಕಾತಿವಯ್ಲ್ಯಾನ್                         ಚರೊನ್ ಕಾಳ್ಜಾಕ್ ಕಸ್ಕಸಾಯ್ತಾ     ಹಾಂವ್ ಉಟ್ತಾಂ         ಆನಿ ಹರ್‍ಶೆಂಚ್ಯಾಕ್‌ಯ್ ಪಾಂಚ್ ಧಿರಾಮ್             ಚಡ್ತಿಕ್ ಭಕ್ಷಿಸ್ ದಿತಾನಾ                 ‘ಶುಕ್ರಿಯಾ ಸಾಹೀಬ್                     ಬಡಿ ಮೆಹರ್‌ಬಾನಿ ಆಪ್‌ಕಿ’                         ತೊ ಮ್ಹಣ್ತಾ ಆನಿ ಭಾಯ್ರ್ ವೆಚ್ಯಾಕ್                             ದಾರ್ ಉಗ್ತೆಂ ಕರ್‍ತಾ     ಕಾಳೊಕಾಂತ್ಲ್ಯಾ ದುಬಾಯಾಂತ್ಲ್ಯಾ         ರಸ್ತ್ಯಾರ್ ಚಲೊನ್ ವೆತಾನಾ             ಮ್ಹಜ್ಯಾ ಗಾಲಾಂಕ್ ಆಪಡ್ತಾಂ                 ಸಕಡ್ ಸಾಫ್ ಸಫಾಯ್ ಜಾಲಾಂ                     ಮ್ಹಳ್ಳ್ಯಾಚಿ ಖಾತ್ರಿ ಕರ್‍ಚೆ ಆದಿಂ     ರಸ್ತ್ಯಾ ಬಗ್ಲೆಚ್ಯಾ ರುಕಾಚೆರ್         ಸೊಜೆರಾಂಚೆ ಕೊಣ್ಣಾ             ದೋನ್ ಅತ್ಮೆ                 ಕಿಡ್ಕಿಡ್ಚೆ ಆಯ್ಕತಾತ್     ಮ್ಹಜ್ಯೆ ಮತಿಂತ್ ನವ್ಯಾನ್         ಏಕ್ ಝುಜ್ ಸುರು ಜಾತಾ             ಆಕೇರ್ ನಾತ್‌ಲ್ಲೆಂ ಝುಜ್!   –  ಮೆಲ್ವಿನ್ ರೊಡ್ರಿಗಸ್ ಯುದ್ಧ ವಾಜಪೇಯಿ ಮತ್ತು ಆಡ್ವಾಣಿಯ ಕುರ್ಚಿಯ ಒಂದು ಕಾಲನ್ನು ತನ್ನ ಮಾತುಗಳಿಂದಲೇ ಮುರಿದು ಮುಷರ್ರಫ್ಪನ ಮಿಲಿಟರಿಯ ಗುಣಗಾನ ಮಾಡುತ್ತಾ, ಭಾರತವನ್ನು ಬೆಂಡೆತ್ತಿ ಎಡಕೈಯಲ್ಲಿ ಗದ್ದವನ್ನೆತ್ತಿ ಬಲಗೈಯಲ್ಲಿ ವಸ್ತರ ಹಿಡಿದು ಈ ಪಾಕಿಸ್ತಾನಿ ಕ್ಷೌರಿಕ ನನ್ನ ಕುತ್ತಿಗೆ ಬಳಿಯ ಗಡ್ಡ ತೆಗೆಯುತ್ತಾನೆ ಪಾಕಿಸ್ತಾನಿ ಸೈನಿಕನ ಕೈಯಲ್ಲಿ ಸಿಲುಕಿದ ಭಾರತೀಯ ಸೈನಿಕನ ನಡುಕ ನನ್ನ ಮೈಯಲ್ಲಿ ಕ್ಷಣದಲ್ಲೇ ಸೈನಿಕನ ಅವತಾರ ತಾಳಿ  ಕುತ್ತಿಗೆ ಸೀಳುವನೋ ಎಂಬ ಹೆದರಿಕೆ ರಾತ್ರಿ ಹನ್ನೊಂದಾಗುತ್ತಿದೆ ಸಲೂನಿನಲ್ಲಿ ನಮ್ಮಿಬ್ಬರ ವಿನಹ ಮತ್ತೊಬ್ಬನಿಲ್ಲ ಎಡಗಣ್ಣ ಕಿರಿದು ಮಾಡಿ ಸೆಲೂನಿನ ಗಾಜಿನಾಚೆಗೆ ಜನವರಿಯ ಚಳಿಯನ್ನು ಹೊದ್ದು ಮಲಗಿದ, ದುಬಾಯಿಯ ರಸ್ತೆ ನೋಡುವಾಗ ಕಾರ್ಗಿಲ್ ಶಿಖರದ ಚಳಿಯಲ್ಲಿಯೂ ಹೋರಾಡಿದ ಸೈನಿಕನಂತೆ ಕುತ್ತಿಗೆಯ ಚರ್ಮ ವಸ್ತರದ ಮೊನಚಿನೊಡನೆ ಹೋರಾಡಿದ ಭಾವ ನಾನು ‘ಮಲ್ಬಾರಿ’ ಯಾ ‘ಮದ್ರಾಸಿ’ ಅವನ ಪ್ರಶ್ನೆ ‘ಮಂಗಳೂರಿಗ’ ನನ್ನ ಉತ್ತರ ನಮ್ಮ ಮಿಸ್ಸಾಯ್ಲ್ ಗಳು ಈಗ ಮೇಲಿನಿಂದ ಕೆಳಗಿನ ತನಕ ನಿಮ್ಮ ಕೇರಳವನ್ನು ಕೂಡಾ ಖೈಮಾ ಮಾಡುವ ತಾಕತ್ತು ಪಡೆದಿವೆ ಅವನು ನನ್ನ ಕುತ್ತಿಗೆಯ ಚರ್ಮ ಹಿಡಿದೆಳೆದು ಅಳಿದುಳಿದ ಗಡ್ಡದ ಚೂರುಗಳನ್ನು ಕೆರೆಯುತ್ತಾನೆ ಇಡೀ ಕಾಶ್ಮೀರ ನಮ್ಮದು ಈ ಕಂಟ್ರೋಲಿನ ಗೆರೆ ಎಳೆದ ಕೂಡಲೇ ಭಯೋತ್ಪಾದನೆ ಉಬ್ಬರಿಸದೆ ನಿಂತಿತೆ? ನಡು ನಡುವೆ ಉರ್ದುವಿನಲ್ಲಿ ಬೈಯುತ್ತಾ ಇದ್ದ ಕ್ಷೌರಿಕ, ಒಮ್ಮೆಲೇ ‘ಬುಲ್ ಶಿಟ್’ ಎನ್ನುತ್ತಾ ಬಾಗಿಲು ತೆರೆದು ಉಗುಳುತ್ತಾನೆ ಓಲ್ಡ್ ಸ್ಪೈಸ್ ನ ಕೆಲ ಹನಿಗಳನ್ನು ನನ್ನ ಕೆನ್ನೆಗಳಿಗೆ ಹಚ್ಚುವಾಗ ಎದ್ದ ಉರಿಗೋ ಇರಬಹುದು ಮುರಿದ ಲಾಹೋರ್ ಒಪ್ಪಂದದ ತುಣುಕುಗಳು ನನ್ನ ಕಣ್ಣೆದುರು ಮೋಡಗಳಾಗಿ ಆವರಿಸುತ್ತವೆ ನಾವು ಬಾರ್ಡರ್ ಮೇಲಿನ ಜನರು ಇಂಡಿಯಾದ ಗುಂಡುಗಳಿಗೆ ನಮ್ಮ ಸಂಬಂಧಗಳು ಹರಿಯುತ್ತವೆ ಹೃದಯಗಳು ಬಿರಿಯುತ್ತವೆ ಮತ್ತು ಕುಟುಂಬಗಳು ಮುರಿಯುತ್ತವೆ ಆದರೂ ನಾವು ಹೆದರಿ ಮಲಗುವುದಿಲ್ಲ ನಾವು ರಕ್ತಸ್ನಾನ ಮಾಡುತ್ತೇವೆ ಮತ್ತು ಪ್ರತಿ ಮನುಷ್ಯ ಸಂಬಂಧದ ನಡುವೆಯೂ ಒಂದು ಬಂದೂಕಿಗೆ ಜಾಗ ನೀಡುತ್ತೇವೆ. ನನ್ನ ಏಳು ವರ್ಷದ ಫಾತಿಮಾಳ ಆತ್ಮ ಬಾರ್ಡರ್ ನಲ್ಲಿ ಅಲೆಯುತ್ತಾ ನಮ್ಮ ದಿಕ್ಕಿಗೆ ಹಾರುವ ಗುಂಡುಗಳ ದಿಕ್ಕನ್ನು ಬದಲಿಸುತ್ತವೆ ಹಾಗಾಗಿ ನಾವು ಹೆದರದೆ ತಿರುಗಾಡುತ್ತೇವೆ. ಕಾಠಿಣ್ಯ ತುಂಬಿದ ಕ್ಷೌರಿಕನ ಹೃದಯ ಬೆಣ್ಣೆಯಂತೆ ಕರಗುತ್ತದೆ ಆತನ ಒಂದು ಕಣ್ಣ ಹನಿ ಉದುರಿ ನನಗೆ ಹೊದಿಸಿದ ಬಟ್ಟೆಯಲ್ಲಿ ಇಂಗುತ್ತದೆ. ನನ್ನ ಕೆನ್ನೆಗಳಿಗೆ ‘ನೀವಿಯಾ ಕ್ರೀಮ್’ ಹಚ್ಚುವಾಗ ಆತನ ಅಂಗೈಯೊಳಗೆ ನಡುಗುವ ನರಗಳ ನಡುಕ ನನ್ನ ಕೆನ್ನೆಯ ಚರ್ಮದೊಳಗಿಂದ ಹರಿದು ಹೃದಯವನ್ನು ಅಲ್ಲಾಡಿಸುತ್ತದೆ ನಾನು ಎದ್ದು ಎಂದಿಗಿಂತ ಐದು ಧಿರಾಮ್ ಹೆಚ್ಚು ಭಕ್ಷೀಸು ನೀಡುವಾಗ ‘ಶುಕ್ರಿಯಾ ಸಾಹೀಬ್ ಬಡಿ ಮೆಹರ್ ಬಾನಿ ಆಪ್ ಕಿ’ ಎನ್ನುತ್ತಾ ಹೊರ ಹೋಗಲು ಬಾಗಿಲು ತೆರೆಯುತ್ತಾನೆ. ಕತ್ತಲಿನ ದುಬಾಯಿಯ ರಸ್ತೆಯಲ್ಲಿ ನಡೆಯುವಾಗ ನನ್ನ ಕೆನ್ನೆಗಳನ್ನು ಮುಟ್ಟುತ್ತೇನೆ ಎಲ್ಲಾ ಸಫಾಯ್ ಆಗಿದೆ ಎಂಬುದರ ಖಾತರಿ ಮಾಡುವ

ಕೊಂಕಣಿ ಕವಿ ಪರಿಚಯ Read Post »

ಇತರೆ, ಮಕ್ಕಳ ವಿಭಾಗ

ಮಕ್ಕಳಿಗೆ ಬದುಕಿನ ಪಾಠ

ಲೇಖನ ಮಕ್ಕಳಿಗೆ ಬದುಕಿನ ಪಾಠ ನಿಖಿಲ ಎಸ್. ಮಕ್ಕಳಿಗೆ ಬೇಕು ಶಿಕ್ಷಣದ ಜೊತೆಗೆ ಜೀವನದ ಪಾಠ.ಒಬ್ಬ ತಂದೆ ತಾನು ಅನುಭವಿಸಿದ ನೋವು ನನ್ನ ಮಕ್ಕಳಿಗೆ ಬರಬಾರದು ಎನ್ನುವಷ್ಟು ಚೆನ್ನಾಗಿ ಓದಿಸಿ,ಒಂದು ಒಳ್ಳೆಯ ನೌಕರಿ ಸೇರಿಸಬೇಕು, ಎಂಬ ಭಾವನೆ ಹೆಚ್ಚಿನ ಪೋಷಕರದ್ದಾಗಿರುತ್ತದೆ. ಇದು ಸಹಜ ಹಾಗೆಯೇ ಇದು ತಪ್ಪಲ್ಲ. ಆದರೆ ಮಕ್ಕಳಿಗೆ ಕಷ್ಟವೇ ಇರಬಾರದು ಎಂದು ಮುದ್ದಿನಿಂದ ಬೆಳೆಸುವುದರಿಂದ ಜೀವನದ ಶಿಕ್ಷಣ ಪಾಠ ಕಲಿಸದೆ ಕೇಳಿದೆಲ್ಲವನ್ನು ತಕ್ಷಣವೇ ಅವರ ಕೈಗೆಟಕುವಂತೆ ನೀಡುವುದರಿಂದ ಮಕ್ಕಳು ಹಣವನ್ನು ಗೆಲ್ಲುತ್ತಾರೆ ವಿನಹ ಜೀವನವನ್ನಲ್ಲ.“ಮಕ್ಕಳಿಗೆ ಆಸ್ತಿಯನ್ನು ಮಾಡುವುದರ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಡಾ. ಅಬ್ದುಲ್ ಕಲಾಂ ಅವರು ಹೇಳಿದ್ದಾರೆ. . ”ಬಾಲ್ಯದಿಂದಲೇ ಜೀವನ ಶಿಕ್ಷಣ ಕಲಿಸಬೇಕೆನ್ನುವ ಸತ್ಯ ಈ ಮಾತಿನ ಹಿಂದಿದೆ.ಹಾಗಿದ್ದರೆ ಜೀವನ ಶಿಕ್ಷಣವೆಂದರೇನು ಎಂಬುದು ಸಹಜವಾಗಿ ಏಳುವ ಪ್ರಶ್ನೆ.ಸಂಸ್ಕಾರ, ಆತ್ಮವಿಶ್ವಾಸ, ಸವಾಲುಗಳನ್ನು ಸ್ವೀಕರಿಸುವ ಆತ್ಮಸ್ದೈರ್ಯ, ಕಠಿಣಪರಿಶ್ರಮ, ಮಾನವೀಯತೆ, ಸ್ವತಂತ್ರ ನಿರ್ಧಾರವನ್ನು ತೆಗೆದುಕೊಳ್ಳುವ ಭರವಸೆ, ಸಕರಾತ್ಮಕ ಮನೋಬಾವನೆಯನ್ನ ಬೆಳೆಸಿಕೊಳ್ಳುವುದೇ ಜೀವನ. ಸಂಸ್ಕಾರಕಲಿಸಿ: ಜೀವನದಲ್ಲಿ ಮುಖ್ಯವಾಗಿ ಬೇಕಿರುವುದು“ಸಂಸ್ಕಾರ”ಸುಂದರಬದುಕಿಗೊಂದು ಭದ್ರ ಬುನಾದಿ,ಮನೆಯೇ ಮೊದಲ ಪಾಠಶಾಲೆ. ಮಕ್ಕಳಿಗೆ ವಯಸ್ಸಿಗೆ ಬರುವವರೆಗೂ ತಂದೆ-ತಾಯಿಯೇ ಆದರ್ಶರಾಗಿರುತ್ತಾರೆ.ಅವರ ನಡವಳಿಕೆಗಳನ್ನೆ ಅನುಸರಿಸುತ್ತಾರೆ. “ಬಿತ್ತಿದಂತೆ ಬೆಳೆ” ಎಂಬ ನಾಣ್ಣುಡಿಯಂತೆ ಮಕ್ಕಳಿಗೆ ಮೌಲ್ಯವನ್ನು ತಿಳಿಹೇಳಿದರೆ ಆ ಆದರ್ಶದಂತೆಯೇ ಬೆಳೆಯುತ್ತಾರೆ. ಅವರಲ್ಲಿ ಸಕರಾತ್ಮಕ ಚಿಂತನೆಯನ್ನ ಬೆಳೆಸುವುದು. ಹಿರಿಯರನ್ನ ಗೌರವಿಸುವುದು. ಭಗವಂತನ ಶ್ರದ್ದೆ ಮತ್ತು ನಂಬಿಕೆಯನ್ನಿಡುವುದು. ಕುಟುಂಬ, ಸಂಬಂದಿಕರೊಂದಿಗೆ ಉತ್ತಮ ಬಾಂದವ್ಯವನ್ನ ಹೊಂದುವುದು. ಜೊತೆಗಿರುವ ಸ್ನೇಹಿತರನ್ನು ಆಧರಿಸಿ ಜೀವನದ ದಿಕ್ಕು ಸಾಗುವುದಿದೆ. ಅವಲಂಬನೆ ತಗ್ಗಿಸಿ: ಹೆತ್ತವರು ಮಕ್ಕಳಿಗೆ ಬದುಕಿನ ಅನುಭವಗಳನ್ನು ಕಲಿಸಬೇಕು. ಮಗು ಎಡವಿಬಿದ್ದಾಗ ಅಳುತ್ತಾರೆ. ಆ ನೋವಿನ ಅನುಭವದಿಂದ ಮುಂದೆ ಎಚ್ಚರಿಕೆಯಿಂದ ಹೆಜ್ಜೆಯನ್ನು ಹಾಕಿ ಮುಂದೆ ಸಾಗಬೇಕು.ಮಕ್ಕಳು ಕೇಳಿದನ್ನೆಲ್ಲಾ ತಂದು ಕೊಡುವ ಬದಲು ಆ ವಸ್ತುವನ್ನು ಖರೀದಿಸುವ ಶ್ರಮವನ್ನ ತಿಳಿಸಿಕೊಡಬೇಕು. ಮಕ್ಕಳು ಪ್ರತಿಯೊಂದು ವಿಷಯದಲ್ಲೊ ಪೋಷಕರನ್ನೇ ಅವಲಂಬಿಸಿದರೆ ಕಲಿಕೆ ಮುಗಿದ ನಂತರ ನೀರಿನಿಂದ ಹೊರ ತೆಗೆದ ಮೀನಿನಂತಾಗುತ್ತದೆ. ಯಾವುದಾದರೂ ಸಣ್ಣಪುಟ್ಟ ವಿಷಯದಲ್ಲಿ ಮಕ್ಕಳೇ ನಿರ್ದಾರ ತೆಗೆದುಕೊಳ್ಳುವಂತಾಗಬೇಕು. ಒತ್ತಡ ಬೇಡ: ನನ್ನ ಮಗ ನಾನು ಹೇಳಿದ ಹಾಗೆ ಕೇಳಬೇಕು, ಹೇಳಿದ್ದನ್ನೆ ಓದಬೇಕು, ನಾನು ಹಾಕಿದ ಗೆರೆ ದಾಟಬಾರದು ಎಂಬ ಭಾವನೆ ಬೆಳೆಸಿಕೊಳ್ಳದೆ ಅವರ ಮನಸ್ಸನ್ನು ಅರಿತು ಅವರು ಬಯಸಿದ ಕ್ಷೇತ್ರದಲ್ಲಿ ಅವರಿಗೆ ಇಷ್ಟವಾದ ವಿಷಯವನ್ನು ಆಯ್ದುಕೊಳ್ಳಲು ಅವಕಾಶ ನೀಡಬೇಕು. ಸ್ನೇಹಬಾವದಿಂದಿರಿ: ಮಕ್ಕಳ ಪ್ರತಿಯೊಂದು ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡದೇ ಕೆಲವವೊಂದು ನಿರ್ದಾರವನ್ನು ಅವರೇ ತೆಗೆದುಕೊಳ್ಳುವ ಹಾಗೆ ಸ್ವಾತಂತ್ರ್ಯ ನೀಡಬೇಕು.ಮಕ್ಕಳಿಗೆ ಜೀವನಶಿಕ್ಷಣದ ಪಾಟವನ್ನು ಕೊಡುವವರು ಬೆಳೆಯುವ ಪರಿಸರ, ತಂದೆ-ತಾಯಿ, ಗುರು-ಹಿರಿಯರು ಅವರ ಮಾರ್ಗದರ್ಶನಲ್ಲಿ ಮಕ್ಕಳು ಉತ್ತಮವಾಗಿ ಬೆಳೆಯಲು ಸಾದ್ಯ… ***************************************************************

ಮಕ್ಕಳಿಗೆ ಬದುಕಿನ ಪಾಠ Read Post »

ಇತರೆ

ಪ್ರತಿಭಾ ಪಲಾಯನ ನಿಲ್ಲಲಿ

ಲೇಖನ ಪ್ರತಿಭಾ ಪಲಾಯನ ನಿಲ್ಲಲಿ ಭಾರತ ದೇಶವು ಇಡೀ ಜಗತ್ತಿನ ಭೂಪಟದಲ್ಲಿಯೇ ರಾರಾಜಮಾನವಾಗಿರಲು ಕಾರಣ ನಮ್ಮ ದೇಶದ  ಕಲೆ,ಸಾಹಿತ್ಯ,ಸಂಸ್ಕೃತಿ,ನಾಗರಿಕತೆ,ಸಹಬಾಳ್ವೆ, ಸಹಮತ, ಸಿರಿ ಸಂಪತ್ತು, ವಾಯುಗುಣ, ಅನೇಕಾನೇಕ ಸಂಪನ್ಮೂಲಗಳ ಆಗರವಾಗಿದ್ದರಿಂದಲೇ ಭಾರತ ಹೆಮ್ಮೆಯ ರಾಷ್ಟ್ರವಾಗಿ ಕಂಗೊಳಿಸುತ್ತಿದೆ.ಅದೆಲ್ಲಕ್ಕಿಂತ ಹೆಚ್ಚಾಗಿ ಭಾರತದಲ್ಲಿರುವ ಶ್ರೇಷ್ಠ ಪ್ರತಿಭೆಗಳಿಂದ ದೇಶವು ಅನಾದಿಕಾಲದಿಂದಲೂ ಜಗದ್ವಿಖ್ಯಾತಿ ಪಡೆಯುತ್ತಾ ಬಂದಿದೆ.ಆರ್ಯಭಟ, ಶ್ರೀನಿವಾಸ ರಾಮಾನುಜನ್, ಸಿ.ವಿ.ರಾಮನ್,ವಿಶ್ವೇಶ್ವರಯ್ಯ, ಅಬ್ದುಲ್ ಕಲಾಂ ರಂತಹ ಅನೇಕಾನೇಕ ಅಪ್ರತಿಮ ಪ್ರತಿಭೆಗಳು ಈ ದೇಶದ ಮಣ್ಣಿನ ಹೆಮ್ಮೆ.ಇವರಂತಹ ಲಕ್ಷಾಂತರ ಪ್ರತಿಭೆಗಳಿಗೆ ಭಾರತಮಾತೆ ದಿನೇ ದಿನೇ ಜನ್ಮಕೊಡುತ್ತಿದ್ದಾಳೆ.ಆದರೆ ಆ ಪ್ರತಿಭೆಗಳ ಸೇವೆ ನಮ್ಮ ರಾಷ್ಟಕ್ಕೆ ಅರ್ಪಿತವಾಗುತ್ತಿಲ್ಲ,ಸಿಗುತ್ತಿಲ್ಲ ಎನ್ನುವುದೊಂದು ದೊಡ್ಡ ದುರಂತವೇ ಸರಿ.  ಅಧಿಕೃತ ಸಮೀಕ್ಷೆಯೊಂದರ ಪ್ರಕಾರ “ಅಮೇರಿಕಾದ ಶೇ.೩೭ ವೈದ್ಯರು, ಶೇ.೩೩ ನಾಸಾ ವಿಜ್ಣಾನಿಗಳು, ಶೇ.೩೯ ರಷ್ಟು ಸಾಫ್ಟವೇರ್ ತಂತ್ರಜ್ಞರು ಭಾರತೀಯ ಸಂಜಾತರಾಗಿದ್ದಾರೆ” ಎಂಬ ಆಶ್ಚರ್ಯಕರ ವಿಷಯವು ದಿಗ್ಬ್ರಮೆಯನ್ನುಂಟು ಮಾಡುತ್ತಿದೆ. ನಮ್ಮ ದೇಶದ ಈ ಪ್ರತಿಭೆಗಳು ವಿದೇಶದಲ್ಲಿ ಸೇವೆ ಸಲ್ಲಿಸುತ್ತಿರುವದರಿಂದಲೇ ಅಮೇರಿಕಾ ಬಲಾಢ್ಯ ರಾಷ್ಟ್ರವಾಗಿದೆ. ಅಮೇರಿಕಾ ಮಾತ್ರವಲ್ಲ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲೂ ಬಾರತೀಯ ಸಂಜಾತರು ತಮ್ಮ ಸೇವೆ ಸಲ್ಲಿಸುತ್ತಲಿದ್ದಾರೆ. ಮಹತ್ವದ ಈ ಸೇವೆ ನಮ್ಮ ದೇಶಕ್ಕೆ ಯಾಕಿಲ್ಲ ಎಂಬ ಪ್ರಶ್ನೆ ನಮ್ಮನ್ನೆಲ್ಲಾ  ಸಹಜವಾಗಿ ಕಾಡುತ್ತಿದೆಯಲ್ಲವೇ?  ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ ಆರ್ಥಿಕ ಮುಗ್ಗಟ್ಟು ಒಂದು ಕಾರಣವಿರಬಹುದು. ಹಣದಾಸೆಗಾಗಿಯೋ ಅಥವಾ ಈ ದೇಶದಲ್ಲಿ ಪ್ರತಿಭೆಗಳಿಗೆ ಅವಕಾಶ ಇಲ್ಲವೆಂಬುದಕ್ಕಾಗಿಯೋ ಏನೋ ಪ್ರತಿಭೆಗಳ ಪಲಾಯನವಾಗುತ್ತಲೇ ಇದೆ.ವಿದೇಶಗಳಲ್ಲಿರುವ ಭಾರತೀಯ ಸಂಜಾತರು ಸ್ವದೇಶದಲ್ಲಿರುವ ತಮ್ಮ ಕುಟುಂಬಕ್ಕೆ ಹಣ ರವಾನೆ  ಮಾಡುವುದರಲ್ಲಿ ವಿಶ್ವದಲ್ಲಿಯೇ ನಂ.೧ ಸ್ಥಾನದಲ್ಲಿದೆ ಎಂದು ವಿಶ್ವಬ್ಯಾಂಕ್ ಇತ್ತಿಚೆಗೆ ಸಾಕ್ಷಿಸಮೇತ ಧೃಡಿಕರಿಸಿದೆ. ಈ ವರ್ಷವೊಂದರಲ್ಲಿಯೇ ೪೨೨೫ ಶತಕೋಟಿ ರೂ.ಗಳು ವಿದೇಶದಿಂದ ನಮ್ಮ ದೇಶಕ್ಕೆ ಬಂದಿದೆ ಎಂಬ ಅಂಶವನ್ನು ನೋಡಿದಾಗ ವಿದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತಿಯ ದ್ಯೆತ್ಯ ಪ್ರತಿಭೆಗಳ ಪಲಾಯನ ಎಷ್ಟಿದೆ ಎಂಬುದು ಗೊತ್ತಾಗುತ್ತದೆಯಲ್ಲವೇ? ಈ ದೇಶದ ಪ್ರತಿಭೆಗಳು ಇಲ್ಲಿಯೇ ಸೇವೆ ಸಲ್ಲಿಸಿದರೆ ಭಾರತ ಶ್ರೀಮಂತ ರಾಷ್ಟ್ರವಾಗಿ, ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮಲು ಸಾಧ್ಯವಿದೆ.ಅಷ್ಟೇ ಅಲ್ಲ ಈ ದೇಶದ ಏಳ್ಗೆಗೆ ಸಹಕಾರ ಕೂಡಾ ಸಿಕ್ಕಂತಾಗುತ್ತದೆ.ಈ ನೆಲದ ಪ್ರತಿಭೆಗಳು  ಜಗತ್ತಿನಲ್ಲಿಯೇ ಶ್ರೇಷ್ಠರು ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕಾಗಿದೆ.    ಆದ್ದರಿಂದ ಸರ್ಕಾರಗಳು ಕೂಡಾ ಪ್ರತಿಭೆಗಳತ್ತ ಗಮನ ಹರಿಸಿ,ಇಲ್ಲಿಯೇ ಯೋಗ್ಯ ನೆಲೆಯನ್ನು ಕಂಡುಕೊಳ್ಳುವಂತೆ ಪ್ರೋತ್ಸಾಹಿಸಬೇಕಾಗಿದೆ.ಅವರ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ಹುಡುಕಿ, ಆರ್ಥಿಕವಾಗಿ ಹೆಚ್ಚಿನ ಸಹಾಯ, ಸಹಕಾರ ಕೊಟ್ಟು ಪ್ರೋತ್ಸಾಹ ನೀಡಿದರೆ ಖಂಡಿತವಾಗಿಯೂ ಪ್ರತಿಭಾ ಪಲಾಯನ ನಿಲ್ಲುತ್ತದೆ. ಅಂದಾಗ ಮಾತ್ರ ದೇಶದ ಆರ್ಥಿಕತೆ ಸದೃಢವಾಗಿ ಭಾರತವು ಬಲಾಡ್ಯ ರಾಷ್ಟವಾಗಿ ಹೊರಹೊಮ್ಮುತ್ತದೆ ಎಂಬುವದರಲ್ಲಿ ಸಂದೇಹವೇ ಇಲ್ಲ.ಇಂತಹ ಒಂದು ಪರಿಣಾಮಕಾರಿ ಸಂದೇಶವನ್ನು ಎಲ್ಲರಿಗೂ ತಲುಪಿಸುವ ಕಾರ್ಯಕ್ಕೆ ಕೈ ಜೋಡಿಸೋಣ..!  ಒಗ್ಗಟ್ಟಾಗಿ ದೇಶದ ಹಿತ ಕಾಪಾಡೋಣ ಬನ್ನಿ….! ಎಲ್ಲರೂ ಒಂದಾಗೋಣ..! *********************************** ಶ್ರೀನಿವಾಸ. ಎನ್.ದೇಸಾಯಿ

ಪ್ರತಿಭಾ ಪಲಾಯನ ನಿಲ್ಲಲಿ Read Post »

ಇತರೆ, ಜೀವನ

ಇತರೆ

ರೈತರ ಆಪತ್ಭಾಂದವ ಜೋಕಪ್ಪನೂ..! ಮಳೆ ತರುವ ದೇವರು ಜೋಕುಮಾರಸ್ವಾಮಿ. ಗಣೇಶ ಶಿಷ್ಟ ಪರಂಪರೆಯ ದೇವರು. ಅಲ್ಲದೇ ಜಾನಪದರ ದೇವರು ಜೋಕುಮಾರಸ್ವಾಮಿ.ಗಣೇಶ ಹೊಟ್ಟೆ ತುಂಬ ಉಂಡು ಭೂಲೋಕದಲ್ಲಿ ಎಲ್ಲವೂ ಸೌಖ್ಯವಾಗಿದೆ ಎಂದು ತನ್ನ ತಂದೆತಾಯಿಗಳಾದ ಶಿವ-ಪಾರ್ವತಿಯರಿಗೆ ವರದಿ ಒಪ್ಪಿಸಿದರೆ, ಜಾನಪದರ ದೇವರು ಜೋಕುಮಾರಸ್ವಾಮಿ ಇಲ್ಲಿ ಮಳೆ, ಬೆಳೆ ಇಲ್ಲದೇ ಕಂಗಾಲಾಗಿರುವ ಜನತೆಯ ಕಷ್ಟ ಕಾರ್ಪಣ್ಯಗಳ ವರದಿ ನೀಡಿ ಮಳೆ ಸುರಿಸಲು ವಿನಂತಿಸಿಕೊಳ್ಳುತ್ತಾನೆ. ಹೀಗಾಗಿಯೇ ಜೋಕುಮಾರಸ್ವಾಮಿ ಒಕ್ಕಲಿಗರಿಗೆ ಮಳೆ ತರುವ ನಂಬಿಗಸ್ತ ದೇವರು. ‘ಜೋಕುಮಾರಸ್ವಾಮಿ ಮಳಿ ಕೊಡಾವ ನೋಡ್ರೀ’ ಎಂದು ರೈತರು ಎದೆ ತಟ್ಟಿ ಹೇಳುತ್ತಾರೆ. ಭಾದ್ರಪದ ಮಾಸದ ಅಷ್ಟಮಿಯ ದಿನದಂದು ಹುಟ್ಟಿದ ಜೋಕುಮಾರ ‘ಜೋಕಪ್ಪ’ ಎಂಬ ಮುನಿಯ ಮಗನೆಂದೂ, ಜೇಷ್ಠಾ ದೇವಿಯ ಮಗನೆಂದೂ ಹೇಳಲಾಗುತ್ತಿದೆ. ಹುಟ್ಟಿದೊಡನೆ ಆತ ತನ್ನ ಕಾಮುಕ ಪ್ರವೃತ್ತಿಯಿಂದ ಊರವರಿಗೆಲ್ಲ ಹೊರೆಯಾಗಿ ಹೋಗುತ್ತಾನೆ. ಜೋಕುಮಾರನನ್ನು ಹೊತ್ತು ತರುವ ಬುಟ್ಟಿಯಲ್ಲಿ ಯಥೇಚ್ಛವಾಗಿ ಬೇವಿನ ಸೊಪ್ಪನ್ನಿಟ್ಟಿರುತ್ತಾರೆ. ಹಾಗಾಗಿಯೇ ದುರ್ಮರಣಕ್ಕೀಡಾದವರನ್ನು ಬೇವಿನ ಸೊಪ್ಪು ಮುಚ್ಚಿ ಶವ ಸಾಗಿಸಲಾಗುತ್ತದೆ. ಆ ಕಾರಣವಿಟ್ಟುಕೊಂಡೇ ಹಳ್ಳಿಯಲ್ಲಿ ತಮ್ಮೂರಿನ ಉಡಾಳರಿಗೆ, ಗೂಂಡಾಗಳಿಗೆ, ಫಟಿಂಗರಿಗೆ ‘ಅಂವಾ ಹೊಕ್ಕಾನಳ ಬೇವಿನ ತೊಪ್ಪಲ ದೊಳ್ಗ’ ಎಂದು ಎಚ್ಚರಿಕೆಯ ಮಾತುಗಳನ್ನು ಹೇಳುತ್ತಿರುತ್ತಾರೆ. ಇಂಥ ಜೋಕುಮಾರ ಹುಟ್ಟುವುದು ವಿಶ್ವಕರ್ಮರ ಮನೆಯಲ್ಲಿ. ಮಣ್ಣಿನಿಂದ ತಿದ್ದಿ, ತೀಡಿದ ಅತ್ಯಂತ ಚೆಲುವಿನಿಂದ ಕೂಡಿದ ಮೂರ್ತಿ ಇದಾಗಿರುತ್ತದೆ. ಮೂರ್ತಿ ಮಾಡಿದವರಿಗೆ ಕೊಡಬೇಕಾದ ಗೌರವ ಧನದೊಂದಿಗೆ ಎಲೆ. ಅಡಿಕೆ, ಉಲುಪಿ (ಹಿಟ್ಟು, ಬೇಳೆ, ಬೆಲ್ಲ, ಅಕ್ಕಿ) ಕೊಟ್ಟು ಪೂಜಿಸಿ ಬುಟ್ಟಿಯಲ್ಲಿಟ್ಟುಕೊಂಡು ಮೊದಲು ಗೌಡರ ಮನೆಗೆ ತರುತ್ತಾರೆ. ಗೌಡರ ಮನೆಯಲ್ಲಿ ಪೂಜೆಯಾದನಂತರ ಅವರು ಕೊಡುವ ಬಿಳಿ ಬಟ್ಟೆಯನ್ನು ಜೋಕುಮಾರನಿಗೆ ಹೊದಿಸಿ ಬೆಣ್ಣೆಯನ್ನು ಬಾಯಿಗೆ ಸವರಿ ಏಳು ದಿನಗಳ ಕಾಲ ಊರಿನ ಪ್ರತಿ ಮನೆಮನೆಗೂ ಜೋಕುಮಾರನನ್ನು ಕರೆದುಕೊಂಡು ಹೋಗುತ್ತಾರೆ. ವಾಲ್ಮೆಕಿ ಜನಾಂಗದ, ಕೋಲಕಾರ, ಕಬ್ಬಲಿಗರ, ಅಂಬಿಗರ ಜನಾಂಗದ ಮಹಿಳೆಯರೇ ಹೆಚ್ಚಾಗಿ ಈ ಜೋಕುಮಾರನನ್ನು ಹೊತ್ತು ತಿರುಗುವ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಪ್ರತಿ ಮನೆಗೆ ಹೋದಾಗ ಕಟ್ಟೆಯ ಮೇಲೆ ಜೋಕುಮಾರನನ್ನು ಇಟ್ಟು ಆತನಿಗೆ ಸಂಬಂಧಿಸಿದ ಹಾಡುಗಳನ್ನು ಹೇಳುತ್ತಾರೆ. ಆ ಹಾಡುಗಳಲ್ಲಿ ಆತನ ಜನನ, ಉಡಾಳತನ, ಆತನ ಕೊಲೆ, ನಂತರದಲ್ಲಿ ‘ಅಡ್ಡಡ್ಡ ಮಳೆಯಾಗಿ, ಗೊಡ್ಡೆಮ್ಮೆ ಹೈನಾಗಿ’ ಎಲ್ಲವೂ ಆ ಹಾಡಿನಲ್ಲಿ ಬರುತ್ತವೆ. ಮನೆಯವರು ಕೊಡುವ ಜೋಳಕ್ಕೆ ಪ್ರತಿಯಾಗಿ ಮೊರದಲ್ಲಿ ಐದಾರು ಕಾಳು ಜೋಳ, ಬೇವಿನ ಸೊಪ್ಪು, ಒಂದಿಷ್ಟು ನುಚ್ಚನ್ನು ಇಡುತ್ತಾರೆ. ಜೋಳದ ಕಾಳನ್ನು, ಬೇವಿನ ಸೊಪ್ಪನ್ನು ಕಾಳಿನ ಸಂಗ್ರಹದಲ್ಲಿ ಹಾಕುತ್ತಾರೆ. ಹೀಗೆ ಮಾಡುವುದರಿಂದ ಪೈರುಗಳು ಹುಲುಸಾಗುತ್ತವೆ ಎಂಬ ನಮ್ಮ ‘ಜನಪದ’ರದು. ಧಾನ್ಯಗಳಿಗೆ ಹುಳು ಬಾಧೆ ಕಾಣಿಸಿಕೊಳ್ಳುವುದಿಲ್ಲ ಎನ್ನುವುದು ರೈತರ ನಂಬಿಕೆ. ಬೇವಿನ ಸೊಪ್ಪು ಕಹಿಯಾದ ಹಾಗೂ ಔಷಧೀಯ ಗುಣವಿರುವ ಸೊಪ್ಪು.ಊರಲ್ಲಿ ಹೀಗೆಯೇ ಏಳು ದಿನ ತಿರುಗಾಡಿದನಂತರ ತಳವಾರರ ಮನೆಯಲ್ಲಿ ಬುಟ್ಟಿ ತುಂಬುವಷ್ಟು ಜೋಳದ ಕಡುಬು ಮಾಡಿ ಜೋಕುಮಾರನ ಮೈ ಮೇಲಿನ ವಸ್ತುಗಳನ್ನು ತೆಗೆದು ಆತನ ಕುತ್ತಿಗೆ ಮುಚ್ಚುವವರೆಗೆ ಕಡುಬುಗಳನ್ನು ಪೇರಿಸಿ ಇಡಲಾಗುತ್ತದೆ.ಒಂದು ಕೈಯ್ಯಲ್ಲಿ ಕೊಬ್ಬರಿ ಬಟ್ಟಲನ್ನು, ಇನ್ನೊಂದು ಕೈಯ್ಯಲ್ಲಿ ದೀಪ ಹಚ್ಚಿದ ಪರಟೆಯನ್ನು ಕೊಟ್ಟಿರುತ್ತಾರೆ. ಆ ನಂತರದಲ್ಲಿ ಗಂಡಸೊಬ್ಬನು ಜೋಕುಮಾರನನ್ನು ಕುಳ್ಳಿರಿಸಿದ ಬುಟ್ಟಿಯನ್ನು ಹೊತ್ತು ನಡೆಯುತ್ತಾನೆ. ಹೀಗೆ ಕತ್ತಲಲ್ಲಿ ಸಾಗಿದ ಜೋಕುಮಾರನನ್ನಾಗಲೀ, ಆತನ ಕೈಯ್ಯಲ್ಲಿಯ ದೀಪವನ್ನಾಗಲೀ ಯಾರೂ ನೋಡುವಂತಿಲ್ಲ. ನೋಡಿದರೆ ಅಪಶಕುನವಷ್ಟೇ ಅಲ್ಲ, ವರ್ಷ ತುಂಬುವದರೊಳಗಾಗಿ ನೋಡಿದಾತ ಲೈಂಗಿಕ ಹಗರಣದಲ್ಲಿ ಸಿಲುಕಿ ಅಪಮಾನವಾಗಿ ಇಲ್ಲವೇ ಪ್ರಾಣ ಕಳೆದುಕೊಳ್ಳುವ ಅಪಾಯವೂ ಉಂಟೆಂದು ಹೇಳಲಾಗುತ್ತದೆ ‘ಜನಪದ’ದಲ್ಲಿ. ಜೋಕುಮಾರನ ಹತ್ಯೆಯಾಗುವ ದಿನ ಆತ ಹಾಯ್ದು ಹೋಗುವ ದಾರಿಯುದ್ದಕ್ಕೂ ಮೊದಲೇ ಒಬ್ಬಾತ ‘ಜೋಕುಮಾರ ಬರ್ತಾನ, ಲಗೂ ಬಾಗ್ಲಾ ಮುಚ್ಚ್ರೀ’ ಎಂದು ಹೇಳುತ್ತಾ ಹೋಗುತ್ತಾನೆ. ಮಧ್ಯರಾತ್ರಿಯ ನಂತರವೇ ಜೋಕುಮಾರನನ್ನು ಹೊತ್ತು ಕೇರಿಗೆ ಕರೆತರುತ್ತಾರೆ. ಕೇರಿಯ ಚಾವಡಿಯಲ್ಲೊಬ್ಬ ಬೆನ್ನು ಹಿಂದಕ್ಕೆ ಮಾಡಿಯೇ ಜೋಕುಮಾರನ ಬುಟ್ಟಿಯನ್ನು ತೆಗೆದುಕೊಳ್ಳುತ್ತಾನೆ. ಇಲ್ಲಿಯೂ ಬುಟ್ಟಿ ಕೊಡುವವ, ತೆಗೆದುಕೊಳ್ಳುವವ ಪರಸ್ಪರ ಒಬ್ಬರ ಮುಖವನ್ನು ಇನ್ನೊಬ್ಬರು ನೋಡುವಂತಿಲ್ಲ. ನಂತರ ಬುಟ್ಟಿಯಲ್ಲಿದ್ದ ಕಡುಬುಗಳನ್ನು ತೆಗೆಯುತ್ತಾರೆ. ಅದೇ ಸಮಯದಲ್ಲಿ ಚಾವಡಿ ಕಟ್ಟೆಯ ಮೇಲೆ ಜೋಕುಮಾರನ ಬುಟ್ಟಿಯ ಸಮೀಪ ಬಾರಿ ಮುಳ್ಳಿನ ಕಂಟಿಯನ್ನಿಟ್ಟಿರುತ್ತಾರೆ. ವೇಶ್ಯೆಯರು ಚಾವಡಿಯಲ್ಲಿಟ್ಟಿರುವ ಜೋಕುಮಾರನ ಬುಟ್ಟಿಯ ಸುತ್ತಲೂ ಸುತ್ತುತ್ತಿರಬೇಕಾದರೆ ಪಕ್ಕದಲ್ಲಿರಿಸಲಾಗಿರುವ ಮುಳ್ಳಿನ ಕಂಟಿ ಅವರ ಸೀರೆಗೆ ಸಿಕ್ಕಿ ಜಗ್ಗಿದಾಗ ‘ಜೋಕುಮಾರ ನಮ್ಮನ್ನು ಹಿಡಿದುಕೊಳ್ಳಲು ಬಂದ, ನಮ್ಮ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ’ ಎಂದು ಭೂಮ್ಯಾಕಾಶ ಬಿರಿಯುವಂತೆ ಬಾಯಿ ಮಾಡತೊಡಗುತ್ತಾರೆ. ಅದನ್ನು ಕೇಳಿದವರೆಲ್ಲ ಓಡಿ ಬಂದು ಜೋಕುಮಾರನನ್ನು ಒಣಕೆಯಿಂದ ಹಿಗ್ಗಾಮುಗ್ಗಾ ಥಳಿಸಿ ಕೊಂದು ಹಾಕುತ್ತಾರೆ. ಜೋಕುಮಾರನ ಮರಣದ ನಂತರ ಅಗಸರು ಬಟ್ಟೆ ಒಗೆಯುವ ಹಳ್ಳದ ದಂಡೆಗೋ, ಕೆರೆಯ ಸಮೀಪವೋ, ನದಿ ದಂಡೆಗೋ ಒಯ್ದು ಬಿಸಾಕುತ್ತಾರೆ. ಜೋಕುಮಾರನು ಸತ್ತ ಸುದ್ದಿ ತಿಳಿದ ನಂತರವೇ ಏಳು ದಿನಗಳ ಕಾಲ ಜೋಕುಮಾರನನ್ನು ಹೊತ್ತು ತಿರುಗಿದ ಮಹಿಳೆಯರು ತಲೆಗೆ ನೀರು ಹಾಕಿಕೊಂಡು ಸ್ನಾನ ಮಾಡುತ್ತಾರೆ. ಆ ಮೇಲೆ ಮೂರು ದಿನಗಳ ಕಾಲ ಊರಿನ ಯಾವ ಮಡಿವಾಳರೂ ಬಟ್ಟೆಗಳನ್ನು ಒಗೆಯುವಂತಿಲ್ಲ. ಜೋಕುಮಾರನನ್ನು ಬಿಸಾಕಿದ ಸ್ಥಳದಲ್ಲಿ ಕಲ್ಲಿಟ್ಟು ಪೂಜಿಸಿ ಎಡೆ ತೋರಿಸಿ ‘ದಿನ’ ಮಾಡಿ ಮುಗಿಸಿ ತಮ್ಮ ಕಾಯಕ ಪ್ರಾರಂಭಿಸುತ್ತಾರೆ..! ಇದು ಜೋಕುರಸ್ವಾಮಿಯ ಜಾನಪದ ಕತೆ… ನಿಜಕ್ಕೂ ಜೊಕುಮಾರಸ್ವಾಮಿ ರೈತರ ದೇವರು. ಏಕೆಂದರೆ ರೈತರ ಪೀಕು-ಪೈರಿನ ಹುಲುಸುವಿಕೆ ಬಯಸುವ ದೇವರು ಜೋಕುಮಾರಸ್ವಾಮಿ. ಮಳೆಗಾಗಿ ಶಿವ-ಪಾರ್ವತಿಯರನ್ನು ಅಂಗಲಾಚಿ ಮಳೆ ತರಿಸುವ ದೇವರು.ಜೊಕುಮಾರಸ್ವಾಮಿಗಿಂತಲೂ ಮೊದಲು ಬಂದು ಹೋಗುವ ದೇವರು ಗಣೇಶ ಉಂಡಿ-ಕಡಬು ತಿಂದು ಸಂಪಲೇಪರಾಕೆನ್ನುತ್ತಾ ರೈತರ ಕಷ್ಟ-ಕಾರ್ಪಣ್ಯದತ್ತ ಗಮನ ಕೊಡದ ದೇವರು..! ಹೀಗಾಗಿಯೇ ಜೊಕಪ್ಪ ಅಥವಾ ಜೋಕುಮಾರಸ್ವಾಮಿ ರೈತರಿಗೆ ಆಪದ್ಭಾಂವ ಅನ್ನಲೇನೂ ಅಡ್ಡಿಯಿಲ್ಲ… *********************** ಕೆ.ಶಿವು.ಲಕ್ಕಣ್ಣವರ

ಇತರೆ Read Post »

ಇತರೆ, ಜೀವನ

ನಮ್ಮ ಮಕ್ಕಳು ಮಕ್ಕಳಲ್ಲ

ಸರಿತಾ ಮಧು ಮಕ್ಕಳಿಗಾಗಿ ಹಂಬಲ ಎಲ್ಲರದು. ಅಂದಿನಿಂದ ಇಂದಿನವರೆಗೂ ಮಕ್ಕಳು ಮನೆಯ ನಂದಾದೀಪ. ಮಕ್ಕಳಿರಲವ್ವ ಮನೆತುಂಬ ಎನ್ನುವ ಕಾಲ ಸರಿದು ಆರತಿಗೊಬ್ಬಳು ಕೀರ್ತಿ ಗೊಬ್ಬ , ತದನಂತರ ನಾವಿಬ್ಬರು ನಮಗೊಂದು ಮಗು ಅನ್ನುವ ಕಾಲಘಟ್ಟದಲ್ಲಿದ್ದೇವೆ. ಇದೆಲ್ಲವೂ ಸರಿಯಷ್ಟೇ ಆಧುನಿಕತೆಯ ಬೆನ್ನನೇರಿದ ಈಗಿನವರು ಮಗುವಿನ್ನೂ ಗರ್ಭದಲ್ಲಿರುವಾಗಲೇ ವಿದ್ಯಾಭ್ಯಾಸದ ವಿಚಾರಕ್ಕೆ ತಲೆಬಿಸಿ ಮಾಡಿಕೊಳ್ಳುತ್ತಾರೆ.ಮೊದಲೆಲ್ಲಾ ಹೀಗಿರುತ್ತಿತ್ತೇ? ಅವಿಭಕ್ತ ಕುಟುಂಬಗಳಲ್ಲಿ ಅನೌಪಚಾರಿಕವಾಗಿ ಪ್ರಾಥಮಿಕ ಶಿಕ್ಷಣ ಆರಂಭವಾಗುತ್ತಿತ್ತು.ಐದುವರ್ಷಗಳು ಪೂರ್ಣ ತುಂಬುವವರೆಗೂ ಬಾಲ್ಯಾವಸ್ಥೆಯ ಎಲ್ಲಾ ಸುಖಗಳನ್ನು ಸಂಪೂರ್ಣ ಬಾಚಿಕೊಳ್ಳುತ್ತಿದ್ದೆವು. ಮನೆಯ ಅಜ್ಜ ಅಜ್ಜಿ, ದೊಡ್ಡಪ್ಪ ದೊಡ್ಡಮ್ಮ, ಮಾವ ಅತ್ತೆ, ಚಿಕ್ಕಪ್ಪ ಚಿಕ್ಕಮ್ಮ ,ಅಣ್ಣ ಅಕ್ಕ , ಅಪ್ಪ ಅಮ್ಮ ರೊಂದಿಗೆ ನಲಿವಿನ ಸಮಯ ಕಳೆಯಲು ಅವಕಾಶವಿತ್ತು. ಹಗಲಿನಲ್ಲಿ ಹಾಡುವ ಹಕ್ಕಿಯೂ,ಓಡುವ ಎಳೆಗರುವೂ, ಮೂಡಣದ ಸೂರ್ಯ, ಹಸಿರೆಲೆಯ ಗಿಡಮರಗಳು, ಬಣ್ಣ ಬಣ್ಣದ ಹೂಗಳು, ಮಕರಂದ ಹೀರುವ ದುಂಬಿಗಳು ಒಂದಲ್ಲ ಎರಡಲ್ಲ . ಎಂಥ ಚಂದವಿತ್ತು ನಮ್ಮ ಬಾಲ್ಯ.ಸಂಜೆಯಾದೊಡನೆ ತಿಂಗಳ ಬೆಳಕಿನ ಅಂಗಳದಲ್ಲಿ ಅಜ್ಜನೇ ಮೇಷ್ಟ್ರು. ಅವನ ಬಾಯಿ ಲೆಕ್ಕಾಚಾರದ ಮುಂದೆ ಈಗಿನ ಕ್ಯಾಲ್ಕುಲೇಟರ್ ಸಹಾ ಹಿಂದೆಬೀಳುತ್ತಿತ್ತು.ಎಷ್ಟು ಸರಾಗವಾಗಿ ಮಗ್ಗಿಗಳನ್ನು ನನ್ನಜ್ಜ ಹೇಳುತ್ತಿದ್ದ. ಅಜ್ಜಿಯೇ ಕಥೆಯ ನಿರೂಪಕಿಯಾಗಿ ಲಾಲಿ ಹಾಡುವವರೆಗೂ ರಾತ್ರಿಯ ಸಮಯ ಕಳೆದದ್ದೇ ತಿಳಿಯುತ್ತಿರಲಿಲ್ಲ.    ಟಿವಿ, ಮೊಬೈಲ್ ಗಳ  ಹಾವಳಿಯಿಲ್ಲದ ನಿರಾತಂಕ ಜೀವನ. ಐದು ವರ್ಷಗಳ ನಂತರವೇ ಊರಿನ ಕನ್ನಡ ಶಾಲೆಗೆ ಹೋಗುವುದು. ಹೆಚ್ಚಿನ ಹೊರೆಯಿಲ್ಲದ ಸರಳ ಕಲಿಕೆ ಆದರೂ ಶಾಶ್ವತ ಕಲಿಕೆಯಾಗಿತ್ತು.   ಬದಲಾದ ಕಾಲಕ್ಕೆ ಎಲ್ಲವೂ ಮರೆಯಾಯಿತು.ಈಗಂತೂ ಹುಟ್ಟುವ ಮೊದಲೇ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಹೆಸರು ನೊಂದಾಯಿಸಿ ತಮ್ಮ ಮಗುವಿಗೆ ಸೀಟೊಂದನ್ನು ಕಾಯ್ದಿರಿಸಲಾಗುತ್ತದೆ. ರಾತ್ರಿಯಿಡೀ ಸರತಿಸಾಲಿನಲ್ಲಿ ನಿಂತು ತಾವು ಕಷ್ಟಪಟ್ಟ ಅನೇಕ ವರ್ಷಗಳ ದುಡಿಮೆಯನ್ನು ಕೇವಲ ಒಂದು ವರ್ಷದ ಶಾಲಾ ಶುಲ್ಕಕ್ಕಾಗಿ ಖರ್ಚುಮಾಡುತ್ತೇವೆ. ಎರಡೂವರೆ ಮೂರು ವರ್ಷದ ಮಕ್ಕಳ ಬೆನ್ನಿಗೆ ಬಣ್ಣದ ಬ್ಯಾಗನ್ನು ಏರಿಸಿ, ಕೈಗೊಂದು ಊಟದ ಬ್ಯಾಗನ್ನು ಇಳಿಬಿಟ್ಟು, ಹಳದಿ ಬಣ್ಣದ ಬಸ್ಸನ್ನು ಅವಸರದಿಂದಲೇ ಹತ್ತಿಸಿ ಟಾಟಾ, ಬೈಬೈ ಹೇಳಿ ನಿಟ್ಟುಸಿರು ಬಿಡುತ್ತೇವೆ. ಅಲ್ಲಿಗೆ ಒಂದು ದಿನದ ಮಗುವಿನ ಪಯಣ ಯಶಸ್ವಿಗೊಳಿಸಿದ ನಿರಾಳತೆ. ಆದರೆ ಒಲ್ಲದ ಮನಸ್ಸಿನಿಂದ ಶಾಲೆಗೆ ಹೊರಟ ಮಗುವಿನ ಮನಸ್ಸು ಅರಿಯಲು ನಾವು ವಿಫಲವಾದೆವಲ್ಲ! ಬಾಲ್ಯದ ಚಿಗುರುವ ಕನಸುಗಳ ಅಲ್ಲಿಯೇ ಹೊಸಕಿಹಾಕಿಬಿಟ್ಟೆವಲ್ಲ.ನಮ್ಮ ನಿರೀಕ್ಷೆಗಳಿಗಾಗಿ ಅವರ ಕನಸುಗಳನ್ನು ಸೀಲ್ ಮಾಡಿಬಿಟ್ಟೆವಲ್ಲ. ಖಲೀಲ್ ಗಿಬ್ರಾನ್ ಒಬ್ಬ ಅಮೆರಿಕದ ಕವಿ ತನ್ನ ಕವಿತೆಯೊಂದರಲ್ಲಿ ಹೇಳುವಂತೆ:    Your children are not children   They are the sons and daughters of life’s longing for itself   They come through you but not from you   And though they are with you ,   Yet they belong not to you “     ಹೀಗೆ ಸಾಗುವ ಪದ್ಯವೊಂದರಲ್ಲಿ “ನಿಮ್ಮ ಮಕ್ಕಳು , ಮಕ್ಕಳಲ್ಲ ಜೀವದ ಸ್ವಪ್ರೇಮದ ಪುತ್ರ ಪುತ್ರಿಯರು ಅವರು ನಿಮ್ಮ ಮೂಲಕ ಬಂದಿದ್ದಾರೆಯೇ ನಿಮ್ಮಿಂದಲ್ಲ ನಿಮ್ಮ ಜೊತೆ ಇರುವುದಾದರೂ ನಿಮಗೆ ಸೇರಿದವರಲ್ಲ”   ಹೌದು ಮಕ್ಕಳ ಮೇಲೆ ನಮ್ಮ ನಿರೀಕ್ಷೆ ಎಂದೂ ಅತಿಯಾಗಬಾರದು.ನಮ್ಮ ಕನಸುಗಳ ಈಡೇರಿಕೆಗೆ ಅವರನ್ನು ಬಳಸಿಕೊಳ್ಳಬಾರದು.ನಾವೆಂದೂ ಅವರನ್ನು ನಮ್ಮಂತೆ ಮಾಡಲು ಪ್ರಯತ್ನಿಸಬಾರದು.ಕಾರಣ ಅವರ ಕನಸಿನೊಳಗೆ ನಮ್ಮ ಪ್ರವೇಶವಿರಕೂಡದು.ನಮ್ಮ ಪ್ರೀತಿಯನ್ನು ಮಕ್ಕಳಿಗೆ ನೀಡಬೇಕೇ ಹೊರತು ಆಲೋಚನೆಗಳನ್ನಲ್ಲ.   ಡಾ||ಸಿ.ಆರ್.ಚಂದ್ರಶೇಖರ್ ರವರು ತಮ್ಮ ಮನಸ್ಸೇ ನೀ ಪ್ರಶಾಂತವಾಗಿರು ಪುಸ್ತಕದಲ್ಲಿ(ಪು.74) ಹೇಳುತ್ತಾರೆ ನಿರೀಕ್ಷೆಗಳನ್ನು ತಗ್ಗಿಸಿ, ಸಾಧ್ಯವಾದರೆ ನಿವಾರಿಸಿಕೊಳ್ಳಿ. ಅವರ ಮಾತಿನಂತೆ ಖಂಡಿತವಾಗಿ ನಿರೀಕ್ಷೆಗಳಿಂದ ನಿರಾಸೆಯೂ, ನಿರ್ಲಿಪ್ತತೆಯಿಂದ ನೆಮ್ಮದಿಯೂ ದೊರೆಯುತ್ತದೆ. ಮಕ್ಕಳ ಪಾಲನೆ, ಪೋಷಣೆ, ವಿದ್ಯಾಭ್ಯಾಸ,ಮದುವೆ, ಉದ್ಯೋಗ ಎಲ್ಲವೂ ನಮ್ಮ ಕರ್ತವ್ಯ. ಆದರೆ ಇದಕ್ಕೆ ಪ್ರತಿಫಲವಾಗಿ ಪ್ರೀತಿ, ಆಸರೆ,ಹಣ,ವೃದ್ಧಾಪ್ಯದಲ್ಲಿ ನೆರವನ್ನು ನಿರೀಕ್ಷಿಸಬೇಡಿ ಎನ್ನುತ್ತಾರೆ ಡಾಕ್ಟರ್. ಹಾಗಿದ್ದರೆ ಮಕ್ಕಳನ್ನು ಹೆತ್ತು ಹೊತ್ತು ಸಾಕಿದ್ದಕ್ಕೆ ನಿರೀಕ್ಷೆ ಇರಬಾರದೇ?        ಇರಲಿ, ಆದರದು ಒತ್ತಾಯಕ್ಕಲ್ಲ.ನಿಮ್ಮ ಆಸೆ ಆಕಾಂಕ್ಷೆಗಳನ್ನು ,ಗುರಿಗಳನ್ನು ಬಲವಂತವಾಗಿ ಅವರ ಮೇಲೆ ಹೇರಬೇಡಿ. ಅವರ ಹುಟ್ಟು ನಿಮಗೆ ಅದೃಷ್ಟ ತಂದಿತೆಂದು , ಸಂಪತ್ತಿಗೆ ಅಧಿಪತಿಯಾದರೆಂದು ಯಾವುದೇ ಮಗುವನ್ನು ಮೆರೆಸುವುದಾಗಲೀ ಅಥವಾ ಉಂಟಾದ ಸಾಲ ನಷ್ಟಗಳಿಗೆ ಹುಟ್ಟಿದ ಮಗುವಿನ ಜಾತಕವೇ ಕಾರಣವೆಂದು ಹೀಗಳೆಯುವುದಾಗಲೀ ಸಲ್ಲದು. ಮಕ್ಕಳಿಗೆ ಅವರ ಆಸೆ ಆಕಾಂಕ್ಷೆಗಳಿಗೆ ಅನುಗುಣವಾದ ಶಿಕ್ಷಣ ನೀಡಿ, ಆದರೆ ಸಮಾಜದ ಇತರೆ ಮಕ್ಕಳೊಂದಿಗೆ ಹೋಲಿಕೆ ಖಂಡಿತಾ ಬೇಡ. ಜೀವನೋಪಾಯಕ್ಕಾಗಿ ಅವಶ್ಯಕವಾಗಿ ನ್ಯಾಯಯುತವಾದ ದುಡಿಮೆಯೊಂದನ್ನು ಮಾಡುವಂತಿರಲಿ. ದುಡಿಯದೇ ಅಥವಾ ಕೆಲಸ ಮಾಡದೇ ಸುಲಭ ಮಾರ್ಗದಲ್ಲಿ ಹಣ ಗಳಿಸುವುದನ್ನು ತಪ್ಪು ಎಂಬ ಅರಿವು ನೀಡಿದರೆ ಸಾಕು. ಮಕ್ಕಳೆಂದಿಗೂ ನಿಮ್ಮ ಹಣವನ್ನು ಹಿಂತಿರುಗಿಸುವ ಯಂತ್ರಗಳಲ್ಲ. ಬಂಡವಾಳ ಹೂಡಿ ಲಾಭವನ್ನು ನಿರೀಕ್ಷಿಸುವ ವ್ಯವಹಾರವಲ್ಲ.ಬದಲಾಗಿ ಪ್ರೀತಿ, ಸಂಸ್ಕಾರ , ಜವಾಬ್ದಾರಿ , ಶಿಕ್ಷಣ , ಮಾನವೀಯತೆ ನೀಡಿ ನಿರ್ಲಿಪ್ತವಾಗಿ ನೆಮ್ಮದಿಯಿಂದ ನಿಂತು ಬಿಡಿ ಕಾರಣ ಮಕ್ಕಳು ನಿಮ್ಮ ಮಕ್ಕಳಲ್ಲ, ನಿಮ್ಮ ಮೂಲಕ ಬಂದ ದೈವ ಸೃಷ್ಟಿಗಳು. ****************************************

ನಮ್ಮ ಮಕ್ಕಳು ಮಕ್ಕಳಲ್ಲ Read Post »

ಇತರೆ

ವರ್ಧಮಾನ ಸಾಹಿತ್ಯ ಪ್ರಶಸ್ತಿ

ವರ್ಧಮಾನ ಸಾಹಿತ್ಯ ಪ್ರಶಸ್ತಿ ಡಾಕ್ಟರ್ ಬಾಳಾ ಸಾಹೇಬ ಲೋಕಾಪುರ ಮತ್ತು ಡಾ ರಾಜಶೇಖರ ಹಳೆಮನೆ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಕಳೆದ ಮೂವತ್ತೊಂಬತ್ತು ವರ್ಷಗಳಿಂದ ಪ್ರತಿಷ್ಠಿತ ವರ್ಧಮಾನ ಸಾಹಿತ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಮೂಡಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠವು ೨೦೧೯ರ ಸಾಲಿನ ಪ್ರಶಸ್ತಿಗಳನ್ನು ನಿರ್ಣಯಿಸಿದ್ದು ಅಥಣಿಯ ಡಾ ಬಾಳಾಸಾಹೇಬ ಲೋಕಾಪುರ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಮತ್ತು ಉಜಿರೆಯ ಡಾ ರಾಜಶೇಖರ ಹಳೆಮನೆ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದೆ . ವರ್ಧಮಾನ ಸಾಹಿತ್ಯ ಪ್ರಶಸ್ತಿಗೆ ರೂ .ಇಪ್ಪತ್ತೈದು ಸಾವಿರ ಮತ್ತು ವರ್ಧಮಾನ ಉದಯೋನ್ಮುಖ ಪ್ರಶಸ್ತಿಗೆ ರೂ. ಹದಿನೈದು ಸಾವಿರಗಳ ಗೌರವ ಸಂಭಾವನೆ ಇದ್ದು ತಾಮ್ರ ಪತ್ರದ ಜೊತೆ ಸನ್ಮಾನವನ್ನು ಇವು ಒಳಗೊಂಡಿವೆಈಚೆಗೆ ಮೂಡಬಿದ್ರೆಯಲ್ಲಿ ಪೀಠದ ಕಾರ್ಯಾಧ್ಯಕ್ಷರಾದ ಎಸ್.ಡಿ. ಸಂಪತ್ ಸಾಮ್ರಾಜ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯಾದ್ಯಂತದಿಂದ ಬಂದ ಶಿಫಾರಸುಗಳನ್ನು ಆಧರಿಸಿ ಡಾಕ್ಟರ್ ಎಸ್ ಪಿ ಪದ್ಮಪ್ರಸಾದ್ ಡಾಕ್ಟರ್ ಬಿ. ಜನಾರ್ದನ ಭಟ್ ಮತ್ತು ವಿಭಾವರಿ ಭಟ್ ಅವರು ನೀಡಿದ ತೀರ್ಪಿನ ಆಧಾರದ ಮೇರೆಗೆ ಈ ಇಬ್ಬರ ಜೀವಮಾನದ ಸಾಧನೆಯ ಆಧಾರದಲ್ಲಿ ಈ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ ನಾ ಮೊಗಸಾಲೆ ತಿಳಿಸಿದ್ದಾರೆ. ಪರಿಚಯಬಾಳಾಸಾಹೇಬ ಲೋಕಾಪುರ ಬೆಳಗಾವಿ ಜಿಲ್ಲೆ ಅಥಣಿಯ ಶಿರಹಟ್ಟಿಯವರಾದ ಬಾಳಾ ಸಾಹೇಬರು ಭೂಗೋಳಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು ಮತ್ತು ಹಂಪಿ ವಿವಿಯಿಂದ ಪಿಎಚ್ ಡಿ ಪಡೆದವರು. ಬಾಗಲಕೋಟೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರು. ಕನ್ನಡದ ಮಹತ್ವದ ಕತೆಗಾರ ಮತ್ತು ಕಾದಂಬರಿಕಾರರು ಮತ್ತು ವಿಮರ್ಶಕರು ಎಂದು ಮಾನ್ಯರು. ಅವರಿಗೆ ಈಗಾಗಲೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಚದುರಂಗ ಪ್ರಶಸ್ತಿ, ಗೊಮ್ಮಟೇಶ್ವರ ವಿದ್ಯಾಪೀಠ ಪ್ರಶಸ್ತಿ ಗಳಗನಾಥ ಕಾದಂಬರಿ ಪ್ರಶಸ್ತಿ ಮತ್ತು ಮಾಸ್ತಿ ಕಾದಂಬರಿ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ . ಡಾ ರಾಜಶೇಖರ ಹಳೆಮನೆ ಡಾ ರಾಜಶೇಖರ ಹಳೆಮನೆ ಅವರು ಸೂಕ್ಷ್ಮ ಸಂವೇದನೆಯ ಕಥೆಗಾರ. ಅಪರೂಪದ ಒಳನೋಟಗಳುಳ್ಳ ವಿಮರ್ಶಕರೆಂದು ಮಾನ್ಯರು ಅವರು ಈ ತನಕ ಪ್ರಕಟಿಸಿದ ಮೂರು ಕೃತಿಗಳಿಂದ ಭರವಸೆಯ ಲೇಖಕರೆಂದು ಗುರುತಿಸಲ್ಪಟ್ಟಿದ್ದಾರೆ. ವಿಜಯ ಕರ್ನಾಟಕ ಅಕ್ಷಯ ಮತ್ತು ಕರ್ಮವೀರ ಕಥಾ ಸ್ಪರ್ಧೆಗಳಲ್ಲಿ ಅವರು ಬಹುಮಾನಿತರಾಗಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಸಂಯೋಜಿಸಿದ ಸಮಾವೇಶದಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ.

ವರ್ಧಮಾನ ಸಾಹಿತ್ಯ ಪ್ರಶಸ್ತಿ Read Post »

ಇತರೆ

ಕೊಂಕಣಿ ಕವಿಗಳ ಪರಿಚಯ

ಕೊಂಕಣಿ ಕವಿಗಳ ಪರಿಚಯ ಪರಿಚಯಿಸಿದವರು ಶ್ರೀಯುತ ಗುರುದತ್ ಬಂಟ್ವಾಳಕಾರ್.(ಗುರು ಬಾಳಿಗಾ) ಕರ್ನಾಟಕದ ಕೊಂಕಣಿ ಕವಿಗಳನ್ನು ಪರಿಚಯಿಸುವ ಒಂದು ಜವಾಬ್ದಾರಿಯನ್ನು ಸಂಗಾತಿ ಪತ್ರಿಕೆ ನನಗೆ ಕೊಟ್ಟಿದೆ. ಮೊದಲಿಗೆ ನಾನು ಪರಿಚಯಿಸಲು ಇಚ್ಛಿಸುವ ಕವಿ ಶ್ರೀಯುತ ಗುರುದತ್ ಬಂಟ್ವಾಳಕಾರ್. ಗುರು ಬಾಳಿಗಾ ಎಂಬ ಕಾವ್ಯನಾಮದಿಂದ ಬರೆಯುವ ಇವರ ಕವಿತೆಗಳು ಸರಳ ಶಬ್ದಗಳಲ್ಲಿ ಆಳವಾದ ವಿಚಾರಗಳನ್ನು ಮಂಡಿಸುವುದರಲ್ಲಿ ಯಶಸ್ವಿಯಾಗುತ್ತವೆ. ಪ್ರಸ್ತುತ ಮಂಗಳೂರಿನ ಶಕ್ತಿನಗರದಲ್ಲಿರುವ “ವಿಶ್ವ ಕೊಂಕಣಿ ಕೇಂದ್ರ” ದಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗುರುದತ್ ಬಂಟ್ವಾಳಕಾರ್ ಅವರು ಅಲ್ಲಿನ ಕೊಂಕಣಿ ಭಾಷಾ ಸಂಶೋಧನಾ ವಿಭಾಗದ ಮುಖ್ಯಸ್ಥರೂ ಆಗಿದ್ದಾರೆ. ಅವರ ಆಯ್ದ ಎರಡು ಕೊಂಕಣಿ ಕವಿತೆಗಳನ್ನು ನಿಮ್ಮ ಓದಿಗಾಗಿ ಕನ್ನಡದಲ್ಲಿ ಅನುವಾದಿಸಿದ್ದೇನೆ. ———— ಫುಲಾಂ ಪಾವ್ಸ್ ಫುಲಾಂ ಪಾವ್ಸ್ದಿವಳೆ ಪರಬೇಚೊತುಮಿ ಜಾಣಾಫುಲಾಂಚೊ ನ್ಹಯ್ಉಜ್ಯಾಚೊಉಜ್ಯಾ ಫುಲಾಂಚೊ ಜೆನ್ನಾ ತೆರಾವೆಳಾರ್ಕಸ್ತೂರ್ ಮೊಗ್ರ್ಯಾಕ್ಮೋಲ್ ಚಡತಾತೆನ್ನಾ ಮ್ಹಜೀ ಆವಯ್ ಮ್ಹಣತಾಹಾತ್ ಲಾಸತಾ! ಬೊದಿಲೇರಾಚಿ ಪ್ರೇಮಿಕಾಜೀನ್ ದುವಾಲ್ಆನಿಮ್ಹಜೀ ಬಾಯಲ್:ಏಕಲಿ ಉಜ್ಯಾಂತೂಲಿ ಫೂಲ್ದುಸರಿಫುಲಾಚೊ ಉಜೊ. — ಗುರು ಬಾಳಿಗಾ. ——– ಹೂ ಮಳೆ. ಮತಾಪಿನ ಹೂಮಳೆದೀಪಾವಳಿಯದುಹೂವಿನದಲ್ಲಬೆಂಕಿಯದುಬೆಂಕಿಯ ಹೂಗಳದು. ನಮ್ಮೂರ ತೇರಿಗೆ..ದುಬಾರಿ ಹೂಚಂಡುಕೈ ಸುಡುತ್ತೆಂದುಅಮ್ಮನ ಅಲವತ್ತು. ಬೋದಿಲೇರನ ಪ್ರೇಯಸಿಜೀನ್ ದುವಾಲ್ಹಾಗೂ ನನ್ನ ಮಡದಿ..ಅವಳು ಬೆಂಕಿಯ ಹೂವುಇವಳು ಹೂವಿನ ಬೆಂಕಿ. — ಶೀಲಾ ಭಂಡಾರ್ಕರ್. ——– ವೇಳ್ ಮೆಗೆಲೆ ಘರಾಚೆಚಾರ ಕುಡಾಂತೂಯ್ಏಕೇಕ್ ಘಡಿಯಾರ ಆಸಾ.ಏಕ ಪಾಂಚ ಮಿನಿಟ ಮುಖಾರ್ ಆಸಾದುಸರೆ ತೀನ ಮಿನಿಟ ಮಾಕಶಿಉರಲೆ ದೋನಿ ಬ್ಯಾಟರಿ ಸರ್ನ್ಬಂದ್ ಪಡಲಾ.ದೆಕೂನ ಆಮಿ ಬಾಯಲ ಬಾಮೂಣದೊಗಾನಯ್ಆಮಚೆ ಮೊಬಾಯಲಾಂತೂಚ್ವೇಳ ಚೊವಪ. ಆಮಚೆ ದೊಗಾಂಚೇಯ್ ಮೊಬಾಯಲ್ಎಕಾಮೆಕಾಂಕ ಪಾಂಚ ಮಿನಿಟಾಂಮಾಕಶಿ ಮುಖಾರ ಆಸಾತ.ತೇ ದೆಕೂನಆಮಿ ಎಕಾಮೆಕಾಂಕ ಕೆನ್ನಾಯ್ಸಾರಕೆ ವೆಳಾರ ಮೆಳಚೇಚ್ ನಾ. ಮ್ಹಜೆ ಆವಯ್ ಬಾಪಯ್ಆಮಚೆ ಲಾಗಶಿಲ್ಯಾ ಘರಾಂತವಸ್ತಿ ಕರೂನ ಆಸಾತ್.ಮ್ಹಜೆ ಬಾಪಯ್ ಕಂಪ್ಯೂಟರಾಂತ್ವೇಳ ಪಳಯತಾಮ್ಹಜೆ ಆವಯ್ ಟೀವೀಂತ್ಆಮಿ ಸಾಂಜೆರ್ ಗೆಲ್ಯಾರ್ತಾಂಚೆ ಸೀರಿಯಲ್ ಆಸತಾನಾಸತಾನಾ ಆಮಕಾವೇಳ ಮೇಳನಾ ಆಮಚೊ ಸ ವರಸಾ ಪೂತಆಮಚೆ ದೋನ ಘರಾಂಚೆ ಮಧೇಂತ್ಯೇವನ ವಚೂನ ವೇಳ ಖೆಳಯತಾ.ದೆಕೂನ್ಆಮಿ ಸಕಡಾನಯ್ತಾಕಾ ಚೋಯತಚ್ ವೇಳ ಸಮಜೂವಚೆ.ಆನಿ ಆಖೇರೀಕ್ ತಾಕಾಚ್ಬೆಸ್ಟಾವಚೆ ತೋವೇಳ ಪಾಡ ಕರತಾ ಮ್ಹಣೂನ. -ಗುರು ಬಾಳಿಗಾ ——- ಸಮಯ ನಮ್ಮ ಮನೆಯ ನಾಲ್ಕೂಕೊಣೆಯೊಳಗಿನಒಂದೊಂದು ಗಡಿಯಾರಗಳು.ಒಂದು ಐದು ನಿಮಿಷಮುಂದಿದ್ದರೆ.. ಇನ್ನೊಂದುಮೂರು ನಿಮಿಷ ಹಿಂದೆ.ಇನ್ನೆರಡು ಬ್ಯಾಟರಿ ಮುಗಿದುನಿಂತು ಹೋಗಿವೆ.ಹಾಗಾಗಿ ನಾವಿಬ್ಬರೂಗಂಡ ಹೆಂಡತಿಸಮಯ ನೋಡಿಕೊಳ್ಳುವುದುನಮ್ಮ ನಮ್ಮ ಮೊಬಾಯಿಲ್‍ಗಳಲ್ಲೇ. ನಮ್ಮಿಬ್ಬರ ಮೊಬೈಲ್‍ನಸಮಯ ಐದು ನಿಮಷಹಿಂದೆ ಮಂದೆ ಇರುವುದರಿಂದನಾವಿಬ್ಬರೂಒಂದೇ ಸಮಯದಲ್ಲಿಎಂದೂ ಸಿಗುತ್ತಿಲ್ಲ. ನಮ್ಮ ತಂದೆ ತಾಯಿನಮ್ಮ ಪಕ್ಕದಲ್ಲಿರುವಮನೆಯಲ್ಲಿ ವಾಸವಾಗಿದ್ದಾರೆ.ಅಪ್ಪ ತನ್ನ ಕಂಪ್ಯೂಟರ್ ಲ್ಲಿಸಮಯ ನೋಡಿಕೊಂಡರೆಅಮ್ಮ ಟಿವಿಯೊಳಗೆ.ನಾವು ಸಂಜೆಯ ಹೊತ್ತುಅವರ ಬಳಿ ಹೋದಾಗಅವರಿಗೆ ಸೀರಿಯಲ್ ಗಳಿರುತ್ತವೆ.ಅದಿಲ್ಲದಾಗ ನಮಗೆಸಮಯವಿರುವುದಿಲ್ಲ. ನಮ್ಮ ಆರು ವರ್ಷದ ಮಗಎರಡೂ ಮನೆಗಳಲ್ಲಿಓಡಾಡುತ್ತಾ ಸಮಯ ಕಳೆಯುತ್ತಾನೆ.ಅವನನ್ನು ನೋಡುತ್ತಲೇನಾವು ಸಮಯವನ್ನುತಿಳಿಯುತ್ತೇವೆ. ಕೊನೆಯಲ್ಲಿ..ಸಮಯ ಹಾಳುಮಾಡುತ್ತಾನೆಂದುಅವನನ್ನೇ ಬೈಯುತ್ತೇವೆ. *********************************************

ಕೊಂಕಣಿ ಕವಿಗಳ ಪರಿಚಯ Read Post »

ಇತರೆ, ಜೀವನ

ಕ್ಷಮಯಾ ಧರಿತ್ರೀ …

ಕ್ಷಮಯಾ ಧರಿತ್ರೀ … ಲಕ್ಷ್ಮಿ ನಾರಾಯಣ ಭಟ್ ಜೀವನ ಪ್ರವಾಹ ನಿಂತ ನೀರಲ್ಲ; ಅದು ಚಿರಂತನ. ನಿರಂತರವಾಗಿ ಹರಿಯುತ್ತಲೇ ಇರುವುದು ಅದರ ಸ್ವ-ಭಾವ. ಯಾವುದು ವ್ಯಕ್ತಿ/ವಸ್ತುವೊಂದಕ್ಕೆ ಸಹಜ ಭಾವವಾಗಿರುತ್ತದೋ ಅದೇ ಅದರ ಸ್ವಭಾವ. ಆದರೆ ಸ್ವಭಾವವನ್ನು ಪರಿಶ್ರಮ, ಚಿಂತನೆಗಳಿಂದ ಪರಿಷ್ಕರಿಸಿಕೊಳ್ಳಬಹುದು. ಇದು ಮನುಷ್ಯನಾದವನಿಗೆ ಮಾತ್ರ ಪ್ರಕೃತಿಯೇ ಕರುಣಿಸಿದ ವಿಶೇಷ ಕರ್ತೃತ್ವ. ಇದರಿಂದ ಆತ ಪ್ರಕೃತಿಯನ್ನೂ ಮಣಿಸಬಲ್ಲ! ಉದಾಹರಣೆಗೆ, ಎತ್ತರದಿಂದ ತಗ್ಗಿಗೆ ಹರಿಯುವುದು ನೀರಿನ ಸ್ವಭಾವವಲ್ಲವೇ? ಆ ಸ್ವಭಾವವನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಪರಿರ್ತಿಸಿದಾಗ, ಜೋಗದಲ್ಲಿ ಜಲಪಾತವಾಗಿ ಧುಮುಕುವ ಶರಾವತಿ ನದಿ ನಮಗೆ ಅತ್ಯಾವಶ್ಯಕವಾದ ವಿದ್ಯುಚ್ಛಕ್ತಿಯನ್ನು ಕೊಡುವ ಅಪಾರ ಸಂಪನ್ಮೂಲವಾಗಿ ಬದಲಾಗುತ್ತಾಳೆ. ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯ ಪರಿಷ್ಕರಣವಿಲ್ಲದೇ ಹೋಗುತ್ತಿದ್ದರೆ ಶರಾವತಿ ಹಾಗೆ ಹರಿದು, ಹೀಗೆ ಧುಮ್ಮಿಕ್ಕಿ ಸಾಗರವನ್ನು ಸೇರಿ ನಿರ್ಲಿಪ್ತ ಭಾವದಿಂದಿರುತ್ತಿದ್ದಳಲ್ಲವೇ? (ಮಹಾತ್ಮಾ ಗಾಂಧೀಜಿ ಶಿವಮೊಗ್ಗಕ್ಕೆ ಬಂದೂ ಜೋಗ ಜಲಪಾತ ನೋಡಲು ಹೋಗಿರಲಿಲ್ಲ! ಕಲೆ ಮತ್ತು ಪ್ರಕೃತಿ ಸೌಂರ್ಯದ ಬಗ್ಗೆ ಅವರ ನಿಲುವು ಬೇರೆಯೇ ಇತ್ತು; ಅದನ್ನು ವಿವರವಾಗಿ ಪ್ರಸ್ತಾಪಿಸಲು ಇದು ಸೂಕ್ತ ವೇದಿಕೆಯಲ್ಲ, ಅಷ್ಟೇ.) ಮನುಷ್ಯನ ಸ್ವಭಾವವೂ ಇದಕ್ಕೆ ವ್ಯತಿರಿಕ್ತವಾಗಿಲ್ಲ! ‘ಮಂಗನಿಂದ ಮಾನವ’ ಎಂಬ ಮಾತೊಂದಿದೆಯಲ್ಲವೇ? ಇದು ಸ್ಥೂಲವಾಗಿ ನಮ್ಮ ಬದುಕಿನ ರೀತಿಯನ್ನೇ ನರ್ದೇಶಿಸುತ್ತದೆ. ಬಾಲ್ಯದಿಂದ ತೊಡಗಿ ಹರೆಯದ ವರೆಗೂ – ಕೆಲವೊಮ್ಮೆ ಕೊನೆಗಾಲದ ವರೆಗೂ – ಚಿತ್ತ ಚಾಂಚಲ್ಯ, ಜಿಹ್ವಾ ಚಾಪಲ್ಯ, ಇಂದ್ರಿಯ ದೌರ್ಬಲ್ಯಗಳನ್ನು ಹದ್ದುಬಸ್ತಿನಲ್ಲಿಡದೇ ಹೋದರೆ ನಾವು ‘ಮರ್ಕಟ’ ಹಂತದಿಂದ ‘ಮಾನ’ವುಳ್ಳ – ಅಂದರೆ ಹದವರಿತು ಬಾಳಬಲ್ಲ ಮನುಷ್ಯತ್ವವನ್ನು ಪಡೆಯುವುದು ಅಸಾಧ್ಯ ಎಂದು ನನ್ನ ನಂಬಿಕೆ. ಇದು ಮಾನವೀಯತೆಯೆಡೆಗೆ ನಮ್ಮ ಮೊದಲ ದೃಢ ಹೆಜ್ಜೆ. ಮಾನವೀಯತೆಯ ಲಕ್ಷಣಗಳೆಂದರೆ ಪಕ್ವತೆ ಮತ್ತು ಆರ್ದ್ರತೆ. ಇದನ್ನೇ “ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು” ಎಂದು ಸರ್ವಜ್ಞ ಹೇಳಿದ್ದು. ಆದರೆ ಇದು ಬಡಪೆಟ್ಟಿಗೆ ಸಾಧಿತವಾಗುವುದಿಲ್ಲ. ಜೀವನದಲ್ಲಿ ಅನೇಕ ಅನುಭವಗಳ ಮೂಲಕ, ಪ್ರಾಯ ಸಂದಂತೆ ನಿಧಾನವಾಗಿ ಬರಬೇಕಾದದ್ದೇ ಹೊರತು ರಾತ್ರಿ ಬೆಳಗಾಗುವುದರೊಳಗೆ “ಓ ನಾನು ಈಗ ಪರಿಪಕ್ವತೆಯನ್ನು ಪಡೆದೆ” ಎಂದಂತಲ್ಲ. ಅದು ಅಕಾಲಿಕವಾಗಿ ಬರಲೂ ಬಾರದು. ಅದು ಲೋಕ ವ್ಯವಹಾರಕ್ಕೆ ವಿರುದ್ಧವಾದದ್ದು ಮತ್ತು ಜನಸಾಮಾನ್ಯರಾದ ನಮ್ಮ ನಿಮ್ಮಂತಹವರಿಗಲ್ಲ. ವಿರಳಾತಿವಿರಳವಾಗಿ ಮಹಾತ್ಮರಿಗೆ ಮಾತ್ರ ದಕ್ಕುವಂತದ್ದು. ಉದಾಹರಣೆಗೆ ಬುದ್ಧ: “ಜಗವೆಲ್ಲ ಮಲಗಿರುವಾಗ ಅವನೊಬ್ಬ ಎದ್ದ” ಅದಕೆಂದೇ ಅವನು “ಬುದ್ಧ”. ಎಲ್ಲರೂ ಹಾಗೆ ಮಾಡಕೂಡದು. ಹಾಗಾಗಿ ನಮ್ಮ ಭಾರತೀಯ ಪರಂಪರೆಯಲ್ಲಿ ಸನ್ಯಾಸಿಯಾಗಬೇಕಾದರೆ ಮದುವೆಯ ಮೊದಲು ತಾಯಿಯ ಒಪ್ಪಿಗೆ, ಮದುವೆಯ ಬಳಿಕವಾದರೆ ಹೆಂಡತಿಯ ಒಪ್ಪಿಗೆ ಕಡ್ಡಾಯ. ಒಬ್ಬನೇ ಮಗ ಸನ್ಯಾಸಿಯಾಗುವುದು ಶಂಕರರ ತಾಯಿಗೆ ಇಷ್ಟವಿರಲಿಲ್ಲ; ಆ ತಾಯಿಯ ಒಪ್ಪಿಗೆಯನ್ನು ಪಡೆಯಲು ಒಂದು ಮೊಸಳೆಯ ಕಥೆ ಬರುತ್ತದೆ. ಇದು ನಿಮಗೆಲ್ಲರಿಗೂ ತಿಳಿದ ವಿಷಯವೇ. ಮೊಸಳೆ ಶಂಕರರ ಕಾಲನ್ನು ಹಿಡಿದಿದೆ ಎಂಬಾಗ ಶಂಕರರು ತಾಯಿ ಆರ್ಯಾಂಭ ಅವರಲ್ಲಿ “ತಾಯೇ, ನಾನು ಸನ್ಯಾಸಿಯಾಗಲು ನೀನು ಒಪ್ಪಿಗೆ ಕೊಟ್ಟರೆ ಈ ಮೊಸಳೆ ನನ್ನನು ಬಿಟ್ಟು ಬಿಡುವುದಂತೆ” ಎಂದಾಗ ತಾಯಿ ಕರುಳು ಚುರುಕ್ ಅಂದಿರಬೇಕು. ಮಗ ಬದುಕಿದರೆ ಸಾಕು ಎಂದ ತಾಯಿ ಒಪ್ಪಿಗೆ ಕೊಟ್ಟರಂತೆ. ಈ ಕಥೆಯ ಸತ್ಯಾಸತ್ಯತೆ ಇಲ್ಲಿ ಪ್ರಸ್ತುತವಲ್ಲ. ‘ಸನ್ಯಾಸತ್ವಕ್ಕೆ ತಾಯಿಯ ಒಪ್ಪಿಗೆ’ ಎಂಬ ತಾತ್ವಿಕತೆ ಮುಖ್ಯ, ಅಷ್ಟೇ. ಈ ಪದ್ಧತಿಯನ್ನು ಮಾಡಿದ ಉದ್ದೇಶವೆಂದರೆ ಯಾರೂ ಉಡಾಳರಾಗಿ ಸಂಸಾರದ ಜವಾಬ್ದಾರಿಯಿಂದ ಸುಖಾ ಸುಮ್ಮನೆ ಓಡಿ ಹೋಗಬಾರದು ಎನ್ನುವುದಷ್ಟೇ ಎಂದು ನನ್ನ ಅಭಿಪ್ರಾಯ. ಇರಲಿ. ಅದಕ್ಕೆ ಹೇಳಿದ್ದು ಅಕಾಲಿಕವಾಗಿ ವೈರಾಗ್ಯ ಬರಬಾರದು. ವಾತ್ಸಾಯನನನ್ನು ಓದುವ ಪ್ರಾಯದಲ್ಲಿ ವೇದಾಂತ, ಭಗವದ್ಗೀತೆ ಸಲ್ಲ. ಅಂದರೆ ಅದನ್ನು ಓದಲೇ, ಕಲಿಯಲೇ ಬಾರದು ಎಂಬ ನಿರ್ಬಂಧವಿಲ್ಲ; ಆದರೆ ಅದರಲ್ಲೇ ಮುಳುಗಿ ಹೋಗಬಾರದು ಎನ್ನುವ ಭಾವ. ಹಾಗಾದರೆ ಪಕ್ವತೆ, ಆರ್ದ್ರತೆಯನ್ನು ಸಾಧಿಸುವ ಬಗೆ ಹೇಗೆ? ಮನುಷ್ಯನ ಜೀವನದಲ್ಲಿ ಬಹುಶಃ ಕ್ಷಮಾಗುಣಕ್ಕಿಂತ ದೊಡ್ಡ ಮಾನವೀಯತೆ ಇಲ್ಲವೇನೋ! ಹಾಗಾಗಿ ವ್ಯಕ್ತಿತ್ವದ ಪಕ್ವತೆ,ಆರ್ದ್ರತೆಗಳ ಒಂದು ವಿಶೇಷ ಲಕ್ಷಣ ಅಂದರೆ ಕ್ಷಮಾಗುಣ ಎಂದು ನಾವು ತಿಳಿಯಬಹುದು. ತನ್ನ “ಶ್ರೀ ರಾಮಾಯಣ ದರ್ಶನಂ” ನಲ್ಲಿ ಕವಿ ಕುವೆಂಪು ಅವರು ಈ ಮಾತು ಹೇಳುತ್ತಾರೆ: “ಪಾಪಿಗುದ್ಧಾರಮಿಹುದೌ ಸೃಷ್ಟಿಯ ಈ ಮಹದ್ವ್ಯೂಹದೋಳ್” ಹೃದಯ ವೈಶಾಲ್ಯವನ್ನು ಬೆಳೆಸಿಕೊಳ್ಳದೆ ಕ್ಷಮಾಗುಣವನ್ನು ರೂಢಿಸಿಕೊಳ್ಳಲು ಅಸಾಧ್ಯ. ಶಿರಚ್ಛೇಧದ ಮೂಲಕ ಮರಣದಂಡನೆಯನ್ನು ಜಾರಿಗೊಳಿಸುವ ದೇಶದಲ್ಲೂ ಕ್ಷಮಾಗುಣಕ್ಕೆ ಆದ್ಯತೆ ಇದೆಯೆಂಬುದನ್ನು ನಾವು ಮರೆಯಬಾರದು. ಮತ್ತು ಈ ಕ್ಷಮಾದಾನದ ಪರಮಾಧಿಕಾರ ಕೊಡಲ್ಪಟ್ಟಿರುವುದು ಪ್ರಭುತ್ವಕ್ಕಲ್ಲ, ಬದಲಾಗಿ ಅನ್ಯಾಯಕ್ಕೊಳಗಾದ ವ್ಯಕ್ತಿ ಅಥವಾ ಆತನ ನಿಕಟ ಕುಟುಂಬ-ಸಂಬಂಧಿಗೆ ಮಾತ್ರ. [ಇದನ್ನು ಈಗ ಅಪರಾಧ ಶಾಸ್ತ್ರ ದಲ್ಲಿ  ಎಂಬ ಹೆಸರಿನಲ್ಲಿ ಅಧ್ಯಯನ ಮಾಡಲಾಗುತ್ತಿದೆ. ಇದು ಈ ಅಧ್ಯಯನ ಕ್ಷೇತ್ರವೊಂದರ ಇತ್ತೀಚಿಗಿನ ಹೊಸ ಬೆಳವಣಿಗೆ.] ಇದೊಂದು ಸತ್ಯ ಘಟನೆ. ಕೊಲ್ಲಿ ರಾಷ್ಟ್ರವೊಂದರಲ್ಲಿ ಒಂದು ಕುಟುಂಬದ ನಾಲ್ಕೈದು ಮಂದಿಯನ್ನು ಬರ್ಬರವಾಗಿ ಹತ್ಯೆಗೈದುದಕ್ಕಾಗಿ ಅಪರಾಧಿಗೆ ಮರಣದಂಡನೆ ವಿಧಿಸಲಾಗಿತ್ತು. ಆ ದೇಶದ ಪದ್ಧತಿಯಂತೆ ಸಾರ್ವಜನಿಕವಾಗಿ ಅಪರಾಧಿಯ ತಲೆ ಕಡಿದು ಮರಣದಂಡನೆಯನ್ನು ವಿಧಿಸುವುದು ರೂಢಿ. ಅಲ್ಲಿ ನೆರೆದಿದ್ದವರಲ್ಲಿ ಆ ಕುಟುಂಬದ ನಿಕಟ ಸಂಬಂಧಿಯೂ ಇದ್ದ. ಆತನಿಗೆ ಅಪರಾಧಿಯ ಬಗ್ಗೆ ಅತ್ಯಂತ ದ್ವೇಷ, ತಿರಸ್ಕಾರ, ಜಿಗುಪ್ಸೆ ಎಲ್ಲವೂ ಇತ್ತು. ಇದು ಸಹಜ ತಾನೇ? ಇನ್ನೇನು ಶಿಕ್ಷೆ ಜಾರಿಯಾಗಬೇಕೆನಿಸುವಷ್ಟರಲ್ಲಿ ಅಪರಾಧಿ ಆ ಕುಟುಂಬ ಸದಸ್ಯನ ಕಾಲಿಗೆ ಬಿದ್ದು ತನ್ನನ್ನು ಕ್ಷಮಿಸುವಂತೆ ಬಗೆ ಬಗೆಯಾಗಿ ಬೇಡಿಕೊಂಡ. ಯಾಕೋ ಏನೋ ಆ ಕ್ಷಣದಲ್ಲಿ ಆತನ ಮನ ಕರಗಿ ಕ್ಷಮಾದಾನ ಮಾಡಿದನಂತೆ. ಆ ಬಳಿಕ ಆತ ಹೇಳಿದ ಮಾತು ತುಂಬಾ ಅರ್ಥಪೂರ್ಣ ಮಾರ್ಮಿಕವಾಗಿತ್ತು: “ನನ್ನ ಹೃದಯದ ಕಹಿಯೆಲ್ಲಾ ಈಗ ಬತ್ತಿ ಹೋಗಿದೆ. ನನ್ನೊಳಗೆ ಅನಿರ್ವಚನೀಯ ಶಾಂತಿ ತುಂಬಿದ ಧನ್ಯತಾ ಭಾವ ಅರಳಿದೆ. ಕ್ಷಮಾಗುಣಕ್ಕೆ ಇಂತಹ ಶಕ್ತಿ ಇದೆಯೆಂದು ನನಗೆ ಈ ವರೆಗೂ ತಿಳಿದಿರಲಿಲ್ಲ! ಅಪರಾಧಿಯನ್ನು ಕ್ಷಮಿಸಲು ನನಗೆ ಪ್ರೇರಣೆ ನೀಡಿದ ಪರಮ ದಯಾಳು ದೇವರಿಗೆ ನಾನು ಚಿರಋಣಿ.” ಈ ತೃಪ್ತ ಭಾವವನ್ನು ಕಿಂಚಿತ್ ಪ್ರಮಾಣದಲ್ಲಾದರೂ ಅರ್ಥೈಸಿಕೊಳ್ಳಬೇಕಿದ್ದರೆ ನಾವೂ ಯಾರನ್ನಾದರೂ ಕ್ಷಮಿಸಿದ್ದರೆ ಮಾತ್ರ ಸಾಧ್ಯ ಎಂಬುದನ್ನು ಪ್ರಾಮಾಣಿಕವಾಗಿ ವಿನಮ್ರತೆಯಿಂದ, ಸ್ವಾನುಭವದಿಂದ ನಾನು ಹೇಳಬಲ್ಲೆ. (ನನ್ನ ಅನುಭವ ಬಹಳ ದೊಡ್ಡ ಮಟ್ಟದ್ದು ಎಂದಾಗಲಿ, ನಾನು ಕ್ಷಮಾಗುಣದ ಸಾಕಾರಮೂರ್ತಿ ಎಂಬ ಅಹಂಕಾರವಾಗಲಿ ಒಂದಿಷ್ಟೂ ಇಲ್ಲದೆ ಈ ಮಾತನ್ನು ಬಹಳ ಸಂಕೋಚದಿಂದ ಹೇಳುತ್ತಿದ್ದೇನೆ. ಆ ಘಟನೆಯ ವಿವರಗಳನ್ನು ಮಾತ್ರ ಇಲ್ಲಿ ಈಗ ಹೇಳುವ ಸ್ಥಿತಿಯಲ್ಲಿ ನಾನಿಲ್ಲ, ಕ್ಷಮಿಸಿ.) ತನಗೆ ಕೇಡು ಬಗೆದವರಿಗೂ ಮನಸಾರೆ ಒಳಿತನ್ನು ಹಾರೈಸುವುದು ಮಾನವೀಯತೆಯ ಪರಾಕಾಷ್ಠೆಯಲ್ಲದೆ ಮತ್ತಿನ್ನೇನು? ನನಗೆ ತಿಳಿದಿರುವ ಎರಡು ಬದ್ಧ ದ್ವೇಷಿ ಕುಟುಂಬದ ಓರ್ವ ಹಿರಿಯ ಮರಣ ಹೊಂದಿದಾಗ ಜೀವನದುದ್ದಕ್ಕೂ ಆತನ ಕಡು ವೈರಿಯಾಗಿದ್ದಾತ ಶವ ಸಂಸ್ಕಾರಕ್ಕೆ ಬಂದು ಬಿಕ್ಕಿ ಬಿಕ್ಕಿ ಅತ್ತು (ಅದು ನಾಟಕವಾಗಿರಲಿಲ್ಲ ಎಂದು ನಾನು ನಿಸ್ಸಂಶಯವಾಗಿ ಹೇಳಬಲ್ಲೆ) ಕುಗ್ಗಿ ಹೋದ ಘಟನೆ ನನ್ನ ಮನಸ್ಸಿನಲ್ಲಿದೆ. ಅದನ್ನು ಆ ಸತ್ತ ವ್ಯಕ್ತಿ ಜೀವಂತವಾಗಿರುವಾಗಲೇ ಮಾಡಿದ್ದರೆ ಒಳಿತಿತ್ತು ಎನ್ನುವ ವ್ಯಾವಹಾರಿಕ ಮಾತು ಬೇರೆ. ಅದು ವ್ಯಕ್ತಿ ಬಹಳ ಆಳವಾಗಿ ಯೋಚಿಸಿ     ಮಾಡಿದ ಕೆಲಸವಾದ್ದರಿಂದ  ಮಹತ್ವದ್ದು ಎಂದು ನನ್ನ ಭಾವನೆ. ಸಾಯಿಸಲೆತ್ನಿಸಿದ ರಾಕ್ಷಸಿ ಪೂತನಿಗೂ ಶ್ರೀ ಕೃಷ್ಣ ಮೋಕ್ಷವನ್ನು ಕರುಣಿಸಿದ. ಆಕೆಯದು ತೋರಿಕೆಯ ಕಪಟ ಮಾತೃತ್ವವಾಗಿದ್ದರೂ ಕೃಷ್ಣ ಅದನ್ನು ನೋಡಿದ ಬಗೆ ಬೇರೆ. ಹಾಗೆಯೇ ತನ್ನನ್ನು ಶಿಲುಬೆಗೇರಿಸಿದವರ ಬಗ್ಗೆ “ಮರಣವೃಕ್ಷದೊಳಮೃತ ಫಲದಂತೆ” (‘ಗೊಲ್ಗೊಥಾ’ – ಮಂಜೇಶ್ವರ ಗೋವಿಂದ ಪೈ) ಕಾಣುತ್ತಿದ್ದ ಯೇಸುಸ್ವಾಮಿಯೂ “ತನ್ನ ಕಡಿರ್ಗೆ ತಣ್ಣೆಳಲೀವ ಮರದಂತೆ” (‘ಗೊಲ್ಗೊಥಾ’) ಈ ಮಾತನ್ನು ಹೇಳಿದ: “ತಂದೆಯೇ, ಅವರ ಅಪರಾಧಗಳನ್ನು ಕ್ಷಮಿಸು; ತಾವೇನು ಮಾಡುತ್ತಿದ್ದೇವೆ ಎಂಬುದನ್ನರಿಯರು” ಕ್ಷಮಾಗುಣದ ಚರಮ ಸೀಮೆ ಇದು ಎಂಬುದಕ್ಕೆ ಬೇರೆ ಉದಾರಹರಣೆ ಬೇಕೇ? ನೀವು ಹೇಳಬಹುದು ಇದು ಅಂತಹ ದೈವಾಂಶ ಸಂಭೂತರಿಗೆ ಮಾತ್ರ ಸಾಧ್ಯ. ನಮ್ಮಂತಹ ಹುಲು ಮಾನವರಿಗಲ್ಲ. ಒಪ್ಪಿದೆ. ನನ್ನ ಯೋಚನೆಯೂ ಇದಕ್ಕಿಂತ ಭಿನ್ನವಾಗಿರಲಿಲ್ಲ. ಆದರೆ ಇನ್ನೊಂದು ಸತ್ಯ ಘಟನೆಯನ್ನು ನಾನು ನಿಮ್ಮ ಮುಂದೆ ಇಡುತ್ತಿದ್ದೇನೆ. ಆ ಘಟನೆ ಹೀಗಿದೆ: ಒಮ್ಮೆ ನಮ್ಮ ಕಾಲೇಜಿಗೆ ಓರ್ವ ಅಮೇರಿಕನ್ ಮಹಿಳೆ ಬಂದಿದ್ದರು. ಇದು ನಮ್ಮ ಕಾಲೇಜಿಗೆ ವಿಶೇಷವೇನೂ ಅಲ್ಲ. ಅವರ ಭಾಷಣ ಪೂರ್ವಸೂಚನೆ ಇಲ್ಲದೆ ನಿಗದಿಯಾಯಿತು. ಎಲ್ಲರೊಂದಿಗೆ ನಾನೂ ಆ ಭಾಷಣ ಕೇಳಲು ಹೋಗಿದ್ದೆ. ಅವರು ಒಂದು ಘಟನೆಯನ್ನು ವಿವರಿಸಿದರು. ಅಮೇರಿಕಾದಲ್ಲಿ ಸಾಮಾನ್ಯವಾಗಿ ಎಲ್ಲರೂ ವಾರಾಂತ್ಯದಲ್ಲಿ ಸಕುಟುಂಬವಾಗಿ ಅವರು ಮನೆಯಿಂದ ದೂರ ಸಂಚಾರಕ್ಕೆ ಹೋಗುತ್ತಾರೆ. ಹಾಗೆಯೇ ಒಂದು ಕುಟುಂಬ ತನ್ನ ಐವರು ಮಕ್ಕಳೊಂದಿಗೆ ಊರ ಹೊರಗೆ ಹೋಗಿ ರಾತ್ರಿ ಕಾಲದಲ್ಲಿ ತೆರೆದ ಬಯಲಲ್ಲಿ ತಮ್ಮ ತಮ್ಮ ಸ್ಲೀಪಿಂಗ್ ಬ್ಯಾಗ್ ನಲ್ಲಿ ಮಲಗಿ ನಿದ್ರೆ ಮಾಡುತ್ತಿದ್ದರು. ಬೆಳಗ್ಗೆ ಎದ್ದು ನೋಡುವಾಗ ಅವರ ಕೊನೆಯ ಮಗಳು ಸುಮಾರು ಹದಿಮೂರು ವಯಸ್ಸಿನ ಹುಡುಗಿ ಕಾಣೆಯಾಗಿದ್ದಳು. ಎಲ್ಲೆಲ್ಲೋ ಹುಡುಕಿ ಸೋತ ಅವರಿಗೆ ಕೊನೆಗೆ ಆ ಹುಡುಗಿಯ ಮೃತ ದೇಹ ಒಂದು ಪೊದೆಯಲ್ಲಿ ಎರಡು ದಿನಗಳ ಬಳಿಕ ಸಿಕ್ಕಿತು. ಆಕೆಯನ್ನು ಅಮಾನುಷವಾಗಿ ಬಲಾತ್ಕರಿಸಿ ಕೊಂದು ಬಿಟ್ಟಿದ್ದ ಓರ್ವ ಪಾತಕಿ. ಆ ಕುಟುಂಬ ತನ್ನ ಶಾಂತಿ, ನೆಮ್ಮದಿಯನ್ನು ಕಳೆದುಕೊಂಡು ದು:ಖದಲ್ಲಿ ಮುಳುಗಿತ್ತು. ಆ ಮೇಲೆ ಗೊತ್ತಾಯಿತು ಇದು ಓರ್ವ ವಿಕೃತ ಕಾಮಿಯ ಕೆಲಸ; ಆತ ಈಗಾಗಲೇ ಸುಮಾರು ಹದಿನೈದು ಮಂದಿ ಅಮಾಯಕ ಹೆಣ್ಣುಮಕ್ಕಳನ್ನು ಇದೇ ರೀತಿ ಬಲಾತ್ಕರಿಸಿ ಕೊಂದು ಹಾಕಿದ್ದ. ಸರಿ! ಕಾನೂನಿನ ಕೈಗಳಿಂದ ಅಪರಾಧಿ ಧೀರ್ಘ ಕಾಲ ತಪ್ಪಿಸಿಕೊಳ್ಳಲಾರ ಎಂಬುದು ಅಪರಾಧ ಶಾಸ್ತ್ರದ ಒಂದು ಪ್ರಮೇಯ. ಸ಼ುಮಾರು ಇಪ್ಪತ್ಮೂರು ವಯಸ್ಸಿನ ಓರ್ವ ಯುವಕ ಈ ಕೃತ್ಯ ಮಾಡಿದವನು ಎಂದು ಪೊಲೀಸರು ಸಾಕ್ಷ್ಯಾಧಾರಗಳ ಮೂಲಕ ಕಂಡು ಹಿಡಿದು ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು. ಇತ್ತ ಮಗಳನ್ನು ಕಳೆದುಕೊಂಡ ಆ ತಾಯಿ ಮಾನಸಿಕ ರೋಗಿಯಾಗಿ ಚಿಕಿತ್ಸೆ ಪಡೆಯಬೇಕಾಯಿತು. ಚಿಕಿತ್ಸೆಯ ಭಾಗವಾಗಿ ನೊಂದು, ಬೆಂದ ಆ ಮಹಿಳೆಗೆ ಮಾನಸಿಕ ತಜ್ಞರು ಆ ಅಪರಾಧಿಯನ್ನು ಕ್ಷಮಿಸಿದರೆ ಆಕೆಗೆ ಮಾನಸಿಕ ನೆಮ್ಮದಿ ಸಿಕ್ಕರೂ ಸಿಗಬಹುದು ಎಂದು ಹೇಳಿದರು. ಹಾಗೆ ಆಕೆಯ ಪತಿ ಆಕೆಯನ್ನು ಇದಕ್ಕೆ ಒಪ್ಪಿಸಿದರಂತೆ. ಆಗ ಆ ಮಹಿಳೆ ಆ ಬಗ್ಗೆ ಯೋಚಿಸಿ, “ನೋಡೋಣ. ಪ್ರಯತ್ನ ಪಡುವೆ” ಎಂಬ ಪ್ರಾಮಾಣಿಕತೆಯಿಂದ ಆ ಯುವಕನನ್ನು ಜೈಲಿನಲ್ಲಿ ಭೇಟಿಯಾಗುತ್ತಾಳೆ. ಮೊದಲಿಗೆ ಅವಳ ಮನವಿಯನ್ನು ತಿರಸ್ಕರಿಸಿದ ಅಪರಾಧಿ ಕೊನೆಗೂ ಮನಸ್ಸು ಬದಲಿಸಿ ಆಕೆಯನ್ನು ಭೇಟಿಯಾಗಲು ಒಪ್ಪುತ್ತಾನೆ. ಈ ಮಹಿಳೆ ಅಲ್ಲಿಗೆ ಹೋಗಿ ಆತನಲ್ಲಿ ಮಾತನಾಡಿ “ನಾನು ನಿನ್ನನ್ನು ಮನ:ಪೂರ್ವಕವಾಗಿ ಕ್ಷಮಿಸಿದ್ದೇನೆ” ಎಂದು ಹೇಳಿದರೂ ಆತ ಅದನ್ನು ನಿರ್ಭಾವುಕವಾಗಿ ಕೇಳಿಸಿಕೊಂಡನಂತೆ. ಅವನಲ್ಲಿ ಯಾವ ಬದಲಾವಣೆಯನ್ನೂ ಆ ತಾಯಿ ಕಾಣಲಿಲ್ಲವಂತೆ. ಆದರೆ ಆಕೆ ಆತನನ್ನು ಮನ:ಪೂರ್ವಕವಾಗಿ ಕ್ಷಮಿಸಿ ಹಿಂತಿರುಗಿ ಬಂದ ಮೇಲೆ ನಿಧಾನವಾಗಿ ಆಕೆಯ ಮಾನಸಿಕ ಸ್ವಾಸ್ಥ್ಯ ಮರುಕಳಿಸಿತಂತೆ. ಇಷ್ಟು ಹೇಳಿ ಆ ಅಮೇರಿಕನ್ ಮಹಿಳೆ ತನ್ನ ಮಾತು ಮುಗಿಸಿ “ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ನಿಸ್ಸಂಕೋಚವಾಗಿ ತಿಳಿಸಿ: ಎಂದಾಗ ಸಭೆಯಲ್ಲಿ ಒಂದು ಮೌನ ಆವರಿಸಿತ್ತು. ಆಗ ನಾನು ಹೇಳಿದೆ: “ಇದು ಕೇಳಲಿಕ್ಕೇನೋ ಬಹಳ ಚೆನ್ನಾಗಿದೆ. ಆದರೆ ನಿಜ ಜೀವನದಲ್ಲಿ ಹೀಗಾಗುವುದು ಸಾಧ್ಯವೇ ಎಂಬ ಬಗ್ಗೆ ನನಗೆ ಸಂದೇಹವಿದೆ” ಆ ಅಮೇರಿಕನ್ ಮಹಿಳೆ ತಕ್ಷಣ ಯಾವ ಉತ್ತರವನ್ನೂ ಕೊಡದೆ ಉಳಿದವರ ಅಭಿಪ್ರಾಯಗಳನ್ನು ಕೇಳತೊಡಗಿದರು. ವಿದ್ಯಾರ್ಥಿಗಳೂ, ಅಧ್ಯಾಪಕರೂ

ಕ್ಷಮಯಾ ಧರಿತ್ರೀ … Read Post »

ಇತರೆ, ಲಹರಿ

ನೀ ಒಂದು ಸಾರಿ ನನ್ನ ಮನ್ನಿಸು

ನೀ ಒಂದು ಸಾರಿ ನನ್ನ ಮನ್ನಿಸು ಜಯಶ್ರೀ ಜೆ.ಅಬ್ಬಿಗೇರಿ ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದವರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದೀನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ ಪತ್ರ. ಪ್ರೀತಿಯ ಭಾವದಲ್ಲಿ ವಿರಹದ ಉರಿ ಸಣ್ಣಗೆ ಮನಸ್ಸನ್ನು ಸುಡುತ್ತಿದೆ. ಒಂದೇ ಒಂದು ಸಾರಿ ಎದೆಗವಚಿಕೊಂಡು ಸಾಲು ಸಾಲು ಮುತ್ತಿಕ್ಕಿದರೆ ಸಾಕು. ಹೃದಯದಲ್ಲಿ ನೀ ಮಾಡಿದ ಆಳವಾದ ಗಾಯ ಮಾಯ. ಹರಿಯುವ ನೀರಿನಂತೆ ಸುಡುವ ಬೆಂಕಿಯಂತೆ ಅರಳಿದ ಪ್ರೀತಿಯನ್ನು ಬಚ್ಚಿಡುವುದು ಅಸಾಧ್ಯ. ಪ್ರೀತಿಯಲ್ಲಿ ಸಾವು ಬಂದರೂ ಲೆಕ್ಕಕ್ಕಿಲ್ಲ. ಸಾವಿನ ಭಯವೂ ನನಗಿಲ್ಲ.ಭಯದ ನೆರಳಲ್ಲಿ ಬದುಕುವುದು ಒಂದು ಬದುಕೇ?  ಪ್ರೀತಿಯಿಲ್ಲದ ಜೀವನ, ಜೀವನವೂ ಅಲ್ಲ. ನೀನು ಒಲಿದಾಗ ಇಷ್ಟಿಷ್ಟೇ ಬದಲಾಗಿದ್ದೆ. ತಡೆ ಹಿಡಿದ ಮನದ ಎಲ್ಲ ಬಯಕೆಗಳನು ಮೆರವಣಿಗೆಗೆ ಸಜ್ಜುಗೊಳಿಸಿದ್ದೆ. ನಾನು ಮಾತಿನಲ್ಲಿ ಒರಟ ಎಂದು ಎಲ್ಲರಿಗೂ ಗೊತ್ತು ಆದರೆ ಹೃದಯ ಮೆತ್ತನೆಯ ಹತ್ತಿಯಂತೆ ಬಲು ಮೃದುವಾಗಿದೆ ಕಣೆ.  ಕಾವ್ಯ ಸಾಲಿನಲಿ ಧುಮ್ಮಿಕ್ಕಿ ಹರಿಯುವ ಜಲಧಾರೆಯಂತೆ. ನನ್ನ ಪ್ರೀತಿಗೆ ಮನಸೋತು ನನ್ನ ಬಲಿಷ್ಟ ತೋಳುಗಳಲ್ಲಿ ನಿನ್ನ ನೀನೇ ಬಂಧಿಸಿಕೊಂಡು ಸುಖಿಸಿದ ಪರಿಯನು ಬಣ್ಣಿಸಲು ಪದಕೋಶದ ಪದಗಳು ಸಾಲವು. ನಾನು ನೀನು ಜೊತೆ ಸೇರಿ ಓಡಾಡುತ್ತಿದ್ದಾಗ ಕ್ಷಣ ಕ್ಷಣವೂ ಲವ ಲವಿಕೆ ಪುಟಿದೇಳುತ್ತಿತ್ತು. ಎದೆ ಸೇರಿದ ಹಿತಾನುಭವ ಗುಪ್ತವಾಗಿ ಇರುಳಿನಲ್ಲಿ ಎದ್ದು ನಲಿಯುತ್ತಿತ್ತು. ಅದರಲ್ಲೇ ಮೈ ಮರೆಯುತ್ತಿದ್ದೆ.  ಈಗ ನಿನ್ನ ಮುಂದೆ ನನ್ನ ಮನದ ತೊಳಲಾಟ ಹೇಳದಿದ್ದರೆ ಉಳಿಗಾಲವಿಲ್ಲವೆಂದು ಈ ಓಲೆ ಬರೆಯುತಿರುವೆ. ಪ್ರೇಮ ನಿವೇದನೆಯ ಸಂದರ್ಭದಲ್ಲಿ ನಾನು ಒರಟಾಗಿ ನಡೆದುಕೊಂಡೆ ಎಂಬುದು ನನಗೂ ಅನ್ನಿಸಿದೆ ಗೆಳತಿ. ಅಷ್ಟೊಂದು ಆಪ್ತಳಾದ ನಿನ್ನ ಮುಂದೆ ಇನ್ನೇನು ಮುಚ್ಚು ಮರೆ ಎಂದು ಹಾಗೆ ನಡೆದುಕೊಂಡೆ ಹೊರತು, ಮತ್ತೆ ಬೇರೆ ಯಾವ ಕಾರಣಗಳೂ ಇಲ್ಲ. ಪ್ರೇಮ ಪ್ರಸ್ತಾಪವನ್ನು ಸಾರಾಸಗಟಾಗಿ ತಿರಸ್ಕರಿಸಿ ನಡೆದದ್ದು ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಿನ್ನನ್ನು ನನ್ನ ಜೀವದಂತೆ ಕಂಡ ನನಗೆ ಈ ರೀತಿ ಶಿಕ್ಷಿಸುವುದು ತರವೇ? ನೀನೇ ಪ್ರಶ್ನಿಸಿಕೋ ಗೆಳತಿ. ನನ್ನುಸಿರಲ್ಲಿ ಉಸಿರಾಗಿ ನೀನಿರುವಾಗ, ಉಸಿರಿನ ಕೊನೆಯವರೆಗೂ ಜೊತೆಯಲ್ಲೇ ಜೊತೆಗಿರುವೆ. ಈಗಷ್ಟೇ ಕಲೆತಿರುವ ನವಿರಾದ ಮನವನು ಒರಟಾದ ಮಾತುಗಳಿಂದ ಘಾಸಿಗೊಳಿಸಿರುವೆ. ನಿನ್ನೆದೆಯ ಮೃದು ಭಾವಗಳ ಸಂತೈಸಬೇಕು. ಹೃದಯಾಳದಿಂದ ಆರಾಧಿಸುವ ನಿನ್ನನು ನೆನೆದರೆ ಸಾಕು ಭಾವ ಕೋಶವೆಲ್ಲ ಬೆಚ್ಚಗಾಗುವುದು.  ನೀನೇ ನಿನ್ನ ಕೈಯಾರೆ ಹೆಣೆದ ಸ್ವೆಟರ್‌ನ್ನು ನನ್ನ ಜನುಮ ದಿನದಂದು ಉಡುಗೊರೆಯಾಗಿ ನೀಡಿದೆ. ಅದರ ಮೇಲಿರುವ ಕೆಂಗುಲಾಬಿ ನನ್ನನ್ನು ಮುದ್ದಿಸಲು ಕೆದಕಿ ಕರೆಯುತ್ತದೆ. ಈ ಬಿರು ಬೇಸಿಗೆಯಲ್ಲೂ ನಿನ್ನೊಲವಿನ ಉಡುಗೊರೆ ಮೈಗಂಟಿಸಿಕೊಂಡೇ ಹೊರ ಬೀಳುವೆ. ಗೆಳೆಯರೆಲ್ಲ ಕಾಲೆಳೆದರೂ ಕಿವಿಗೊಡುವುದಿಲ್ಲ. ನೀನೇ ನನ್ನನ್ನು ಗಟ್ಟಿಯಾಗಿ ತಬ್ಬಿದ ಭಾವ ನನ್ನನ್ನು  ಸಣ್ಣನೆಯ ನಶೆಗೊಳಗಾದವನಂತೆ ಆಡಿಸುತ್ತದೆ. ಅದೊಮ್ಮೆ ಇಡೀ ದಿನ ಕಾಡು ಮೇಡು ಬೆಟ್ಟ ಗುಡ್ಡ ಕೈ ಕೈ ಹಿಡಿದು ತಿರುಗಿ ಇಬ್ಬರಿಗೂ ಸುಸ್ತಾಗಿತ್ತು. ಸುಂದರ ಹೂದೋಟದ ಪುಟ್ಟ ಗುಡಿಲಿನ ಮುಂದೆ ಸಂಜೆ ಬಾನಿನ ರಂಗಿಗೆ ಮೈ ಮರೆತಿದ್ದೆ. ಹೃದಯದಲ್ಲಿ ಅವಿತಿದ್ದ ಪ್ರೇಮವು ಕಾರ್ಮೋಡಗಳ ನಡುವೆ ಝಗ್ಗನೇ ಬೆಳಗುವ ಮಿಂಚಂತೆ ನಿನ್ನ ಕಂಗಳಲ್ಲಿ ಮಿಂಚಿದ್ದನ್ನು ಕಂಡೆ. ಜಗದ ಪ್ರೇಮವನ್ನೆಲ್ಲ ನಿನ್ನ ಹೃದಯಕ್ಕಿಳಿಸಿಹರೇನೋ ಎನ್ನುವಂತೆ ಮುಖಭಾವ. ಅಲ್ಲಿರುವ ಕಲ್ಲು ಬಂಡೆಯ ಮೇಲೆ ಸುಖಾಸೀನನಾದೆ.  ನನ್ನ ಬೆರಳುಗಳನು ನವಿರಾಗಿ ಸವರಿದೆ. ಮೊದಲ ಸಲ ಇಂಥ ಒಲವ ಪರಿ ಕಂಡು ಅಚ್ಚರಿಗೊಂಡೆ. ಒಲುಮೆಯಿಂದ ನನ್ನ ಬೆನ್ನಿಗೆ ನಿನ್ನ ಎದೆಯನು ತಾಗಿಸಿದೆ. ಮೈ ನರ ನಾಡಿಗಳೆಲ್ಲ ಒಮ್ಮೆಲೇ ರೋಮಾಂಚನಗೊಂಡವು. ನನ್ನ ಭುಜದ ಮೇಲೊರಗಿ ಕೆನ್ನೆಗೆ ಮುತ್ತಿಕ್ಕಿದೆ.ಅದ್ಯಾವಾಗ ನಿನ್ನ ಕೋಮಲ ಬೆರಳುಗಳ ಸಂದುಗಳನು ನನ್ನ ಒರಟಾದ ಬೆರಳುಗಳು ತುಂಬಿದವೋ ಅರಿವಿಗೆ ಬರಲೇ ಇಲ್ಲ. ಆಲಿಂಗನದಲ್ಲಿ ತುಟಿಗೆ ತುಟಿ ಸೇರಿಸಿ ದೀರ್ಘವಾಗಿ ಚುಂಬಿಸಿದ ಹಿತ ಒಂದು ಅದ್ಭುತ ಕಾವ್ಯ ಓದಿದ ರೀತಿಯಂತಿತ್ತು. ಬಲು ಹುಮ್ಮಸ್ಸಿನಿಂದ ಕಾಮದ ಕುದುರೆಯನು ಓಡಿಸಲು ಉತ್ಸುಕನಾದೆ.  ಪ್ರೇಮೋತ್ಸವದ ಸಂಭ್ರಮದಲ್ಲಿ ಮೀಯಲು ಅಣಿಯಾಗಿದ್ದೆ. ಪ್ರೀತಿಯ ಮಳೆಗರೆದು ದಾಹ ತೀರಿಸಲು ಮುಂದಾಗಿದ್ದೆ ಎಷ್ಟಾದರೂ ಹೆಣ್ಣು ಜೀವವಲ್ಲವೇ? ಬಯಲಲ್ಲಿ ಬೆತ್ತಲಾದರೆ ಮುಂದಾಗುವ ಆಗು ಹೋಗುಗಳಿಗೆ ಈ ಮಿಲನವೇ ಮುಳುವಾಗುವ ಯೋಚನೆ ಕಾಡಿದಾಕ್ಷಣ ನಿನ್ನ  ನಡುವಲ್ಲಿ ಸಣ್ಣಗೆ ನಡುಕ ಶುರುವಾಯಿತು. ಗುಡಿಸಲಿನಿಂದಾಚೆ ಹೆಜ್ಜೆಯಿಟ್ಟು ಹುಲಿಯಿಂದ ತಪ್ಪಿಸಿಕೊಂಡ ಹರಿಣಿಯಂತೆ ಕಾಡನ್ನು ದಾಟಿ ಊರು ತಲುಪಿದೆ.ಅಂದಿನಿಂದ ನನ್ನ ಈ ಬದುಕಿಗೆ ಮಳೆ ಚಳಿ ಬಿಸಿಲಿನ ಲೆಕ್ಕವೇ ಇಲ್ಲ. ದೇಹ ಸಮೀಪಿಸಿದರೂ ಮನಸ್ಸು ಗೆಲ್ಲಲಾಗಲಿಲ್ಲ ಎನ್ನುವ ನೋವು ಕಾಡುತ್ತಿದೆ. ಅರಿಯದೇ ಮಾಡುತ್ತಿದ್ದ ತಪ್ಪಿಗೆ ತೆರೆ ಎಳೆದು ದೊಡ್ಡ ತಪ್ಪನು ತಪ್ಪಿಸಿದೆ. ನಿನಗೆ ಅದೆಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು. ನೀನು ನನ್ನಿಂದ ದೂರವಾದ ಮೇಲೆ ಬದುಕು ಅದೆಷ್ಟೋ ಅನುಭವಗಳನು ಹೇಳಿ ಕೊಟ್ಟಿದೆ. ಬಯಲಲ್ಲಿ ಬೆತ್ತಲೆಯ ಕೋಟೆ ಏರಿದ್ದರೆ ಬದುಕಿನ ಹಳಿ ತಪ್ಪಿ ಹೋಗುತ್ತಿತ್ತು ಎನ್ನುವ ಅರಿವು ಬಂದಿದೆ. ಹೀಗೆ ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿಸಿಕೊಂಡು ನಿನಗೆ ನೀನು ಶಿಕ್ಷಿಸಿಕೊಳ್ಳದಿರು. ರಾಜ ಬೀದಿಯಲ್ಲಿ ನನ್ನ ಪಟ್ಟದ ರಾಣಿಯಾಗಿ ನಿನ್ನ ಸ್ವೀಕರಿಸುವ ಕಾಲ ಬಂದಿದೆ. ‘ನೀ ಒಂದು ಸಾರಿ ನನ್ನ ಮನ್ನಿಸು. ನನ್ನ ಮೇಲೆ ದಯೆ ತೋರಿಸು ಓ ಚಿನ್ನ ರನ್ನ ನನ್ನ ಪ್ರೀತಿಸು.’ ಎಂದು ಹಾಡುತ್ತ ಅದೇ ಗುಡಿಸಲಿನ ಮುಂದೆ ಕಾದು ಕುಳಿತಿರುವೆ. ನಮ್ಮೀರ್ವರ ಹೆತ್ತವರನೂ ಒಪ್ಪಿಸಿರುವೆ. ನನ್ನೊಂದಿಗೆ ಜೀವನ ಪಯಣ ಬೆಳೆಸಲೋ ಬೇಡವೋ ಎನ್ನುವ ಹೊಯ್ದಾಟದಲ್ಲಿ ಬೀಳಬೇಡ. ನಿನ್ನ ಮನಸ್ಸನ್ನು ಗೆದ್ದ ಮೇಲೆಯೇ ಮೈಗೆ ಮೈ ತಾಗಿಸುವೆ ಗೆಳತಿ. ಮೋಡ, ಮಳೆ, ಹಗಲು, ರಾತ್ರಿ, ಮುಸ್ಸಂಜೆ, ಮುಂಜಾವು, ಸಾಗರ, ನದಿ, ತೊರೆ, ಹಳ್ಳ, ಕೊಳ್ಳದ ದಂಡೆಗಳು  ಇನ್ನು ಮೇಲೆ ನಮ್ಮ ಪ್ರೀತಿ ತುಳುಕಾಡಿ ಹೊರಚೆಲ್ಲುವುದಕ್ಕೆ ಸಾಕ್ಷಿಯಾಗಿಸೋಣ. ***************************************                                                  

ನೀ ಒಂದು ಸಾರಿ ನನ್ನ ಮನ್ನಿಸು Read Post »

ಇತರೆ, ಲಹರಿ

ಕಾಡುವ ವಿಚಾರ…

ಕಾಡುವ ವಿಚಾರ… ವಸುಂಧರಾ ಕದಲೂರು               ಆ ದಿನ ನಿಜಕ್ಕೂ ಬಹಳ ಕಳವಳಪಟ್ಟಿದ್ದೆ. ಏನು ಮಾಡಿದರೂ ನನಗೆ ನಂಬಿಕೆ ಮೂಡುತ್ತಿರಲಿಲ್ಲ. ಏಕೋ ಎದೆಯಾಳದಲಿ ತೀವ್ರ ನೋವಾಗುತ್ತಿರುವ ಅನುಭವ. ಆ ಕ್ಷಣಕ್ಕೆ ಆಶಾಭಂಗದ ಅರ್ಥವೂ, ದಿಗ್ಭ್ರಮೆ ಎಂಬುದರ ಪರಿಚಯವೂ ಆಗಿಹೋಯಿತು. ಎಳೆ ಮನದ ಭಿತ್ತಿಯಲಿ  ಉದಿಸಿದ ದುಃಖ ಹಸಿ ನೆಲದಲ್ಲಿ ಬೇರೂರಿದ ಬೀಜದಂತಾಯ್ತು.       ಹೌದು, ಮೊದಲ ಬಾರಿಗೆ ಪ್ರೀತಿಯ ‘ಗಾಂಧಿ’ ಅವರ ಸಾವು ಹೇಗಾಯಿತೆಂದು ತಿಳಿದಾಗ ನನಗಾದ ಅನುಭವವೇ ಈ ಮೇಲಿನದ್ದು. ‘ಮಹಾತ್ಮ ಗಾಂಧೀಜೀ’ ಅಂತಹವರನ್ನೂ ಹೇಗೆ ಕೊಲ್ಲುವುದಕ್ಕೆ ಸಾಧ್ಯ? ಅದೂ ನಾವು ಭಾರತದವರೇ!ಬೆಚ್ಚಿ ಬಿದ್ದಿದ್ದೆ.       ದಿನಗಳು ಉರುಳುರುಳಿ ಸಾವಕಾಶದ ಪರದೆ ಸರಿದು ಅಗೋಚರ ಸಟೆಗಳೂ, ಉಳಿದ ಹಲವು ಸತ್ಯಗಳೂ ದೃಗ್ಗೋಚರವಾಗುತ್ತಾ ಆಗುತ್ತಾ ನನ್ನನ್ನು ಕಂಗೆಡಿಸಿದವು. ಸಮಾಧಾನ ಪಡೆಯುವ ಹಂಬಲಕೆ ಯಾರೂ ದಾರಿ ತೋರುತ್ತಿಲ್ಲ. ಹತಾಶೆ ಗೊಂದಲದ ಗೊಂಡಾರಣ್ಯ ಹೊಕ್ಕು ಸಿಕ್ಕ ಸಿಕ್ಕ ಸಿಕ್ಕುಗಳನು ಬಿಡಿಸುತ್ತಾ ಮತ್ತೆ ಹೆಣೆಯುತ್ತಾ ಅಬ್ಬೇಪಾರಿಯಾಗಿ ನಿಂತ ಭಾವ ನನ್ನದಾಗಿತ್ತು.      ಗಾಂಧಿ ಮಾತ್ರವೇ ಅಲ್ಲ, ಕೃಷ್ಣ(?), ಕ್ರಿಸ್ತ, ಬಸವಣ್ಣ…..!! ಏಕೆ ಈ ಜಗತ್ತು ನ್ಯಾಯಪರವಾಗಿರುವುದಿಲ್ಲ? ಬೆಳಕನ್ನು ಕಾಣಬಯಸದೇ ಕತ್ತಲಿನಲ್ಲಿ  ಕಡಲ ದಡದ ಬಂಡೆಗೆ ಅದೆಷ್ಟು ನಿರಂತರದ ಅಲೆಗಳ ಬಡಿದಂತೆ. ಕಣ್ಣ ಮುಂದೆಯೇ ಒಂದು ಸೊಗಸಾದ ಚಿತ್ರವನು ತಿರುಚಿ ಮುರುಟಿ ತಿಪ್ಪೆಗೆಸೆದಂತೆ. ಆಗ ತಿಳಿದ ಸತ್ಯಗಳೂ… ಆಮೇಲಿನ ದೊಂದಿ ಹಚ್ಚಿ ಕಾಣಿಸುವ ಸುಳ್ಳುಗಳೂ… ಈಗಲೂ ನನ್ನನ್ನು ಕಾಡುತ್ತಲೇ ಇವೆ. ಇದಾವುದರ ಗೊಡವೆಗೆ ಹೋಗದೇ ನಿರಾಳದಲ್ಲಿ ಸಮಾಧಿ ಆಗಿಹೋದ ನನ್ನ ಹಿರೀಕರು ನೆನಪಾಗುತ್ತಾರೆ. ಎಂಥಾ ನೆಮ್ಮದಿಯ ಬದುಕು ಅವರದ್ದಿತ್ತೆಂದು ಯಾವಾಗಲೂ ಅನಿಸುತ್ತದೆ. ಆದರೆ, ಬೆಳಕ ಕಿಡಿ ಕಂಡ ಮೇಲೂ ಅದಕ್ಕೆ ಬೆನ್ನು ತಿರುಗಿಸಿ ಪಾತಾಳದ ಆಳದಲಿ ಬದುಕುವುದು ನನಗೆ ಸಾಧ್ಯವಾದೀತೆ!?            ಸತ್ಯವು ತಿಳಿಯಲಾರದೆಂದಲ್ಲ, ತಿಳಿಯಾಗಲಾರದ ರಾಡಿಯಲ್ಲೇ ಈಗ ಬದುಕುತ್ತಿರುವಾಗ ಕನಸು ಹುಟ್ಟದ  ಕತ್ತಲಲ್ಲಿ ಸೊಗಸಾದ ನಿದ್ರೆಗಳನು ಕಾಣುವುದು ಹೇಗೆ?  ಅಪಾರ ನೆಮ್ಮದಿಯ ರಾತ್ರಿಗಳನ್ನು ಕಂಡಿದ್ದ ಪೂರ್ವಿಕರು  ಹೆಚ್ಚು ಒಳ್ಳೆಯ ಅಭಿರುಚಿ ಇದ್ದವರೆಂದೂ, ಸುಖಿಗಳೆಂದೂ, ಸಿರಿವಂತರೆಂದೂ ನಾನು ಗಟ್ಟಿಯಾಗಿ ನಂಬುತ್ತೇನೆ.       ನನ್ನನ್ನು ಕಾಡುವ ಇತಿಹಾಸಗಳು ನನ್ನ ಕನಸಿಗೂ ಕನ್ನ ಹಾಕುತ್ತಿವೆ. ಹಾಗಾದರೆ ಇತಿಹಾಸ ಓದಲೇ ಬಾರದೆ?  ಅಥವಾ ಓದಬಾರದ ಚರಿತ್ರೆಗಳೂ ಇವೆಯೇ?! ಗೊತ್ತಿಲ್ಲ. ಏಕೆಂದರೆ ಗಾಂಧಿ, ಬಸವಣ್ಣ ಅಂತಹವರ ಸಾವು ಹಾಗೂ ಅದರ ಕಾರಣಗಳು ಆಗ ನಾನು ಪಾಠ ಓದುವ ಹುಡುಗಿಯಾಗಿದ್ದಾಗ ಅಪಾರ ವೇದನೆಯೊಡನೆ ದಿಗ್ಭ್ರಮೆ ತಂದಿದ್ದರೆ, ಈಗ ಈ ನೆಲದ ಮೇಲೆ ಜವಾಬ್ದಾರಿಯುಳ್ಳ ಪ್ರಜೆಯಾಗಿ ಬದುಕಬೇಕೆಂದು ನಿಶ್ಚಯಿಸಿರುವಾಗ, ಇಲ್ಲಿ ಕಂಡುಬರುತ್ತಿರುವ ಹಲವು ಸಾಮಾಜಿಕ ಸನ್ನಿವೇಶಗಳ ಹಿನ್ನೆಲೆಯಲ್ಲಿ ಹೆಚ್ಚು ಕಾಡುತ್ತಿವೆ. ***********************************

ಕಾಡುವ ವಿಚಾರ… Read Post »

You cannot copy content of this page

Scroll to Top