ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ವಿದಾಯ

ಚಂದ್ರಕಾಂತ ಕುಸನೂರು ಖ್ಯಾತ ಸಾಹಿತಿ, ಚಿತ್ರ ಕಲಾವಿದ ಮತ್ತು ಹೈಕು ಗಾರುಡಿಗ ಚಂದ್ರಕಾಂತ ಕುಸನೂರು..! ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ಇಂದು ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯದಲ್ಲಿ ಅಸಂಗತ ನಾಟಕ ಮತ್ತು ಜಪಾನಿ ಮಾದರಿಯ ಹೈಕುಗಳನ್ನು ಪರಿಚಯಿಸಿದ್ದರು ಅವರು. ಹೈಕು ಮಾದರಿಯ ಕವಿತೆಗಳನ್ನು ಸಹ ಕನ್ನಡಕ್ಕೆ ಪರಿಚಯಿಸಿದ್ದರು… ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಕಲಬುರಗಿ ಮೂಲದ ಅವರು ಕೆಲ ದಶಕಗಳಿಂದ ಬೆಳಗಾವಿಯಲ್ಲಿ ವಾಸವಾಗಿದ್ದರು. ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳು ಹಾಗೂ ರಂಗಕರ್ಮಿಗಳು. ಅವರು 1931ರಲ್ಲಿ ಕಲಬುರ್ಗಿಯ ಕುಸನೂರಲ್ಲಿ ಜನಿಸಿದವರು. ಎಂ.ಎ; ಬಿ.ಇಡಿ ಪದವಿಗಳನ್ನು ಪಡೆದಿದ್ದಾರೆ ಅವರು. ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು. ಕಲಬುರ್ಗಿಯಲ್ಲಿ “ರಂಗ ಮಾಧ್ಯಮ”ಎಂಬ ನಾಟಕ ಸಂಸ್ಥೆಯ ಸ್ಥಾಪಕರೂ ಅವರು. ಕನ್ನಡದಲ್ಲಿ ಅಬ್ಬರ್ಡ್ ಮಾದರಿ ನಾಟಕಗಳನ್ನು ರಚಿಸಿದ್ದಾರೆ ಅವರು… 1975ರಲ್ಲಿ “ಯಾತನಾ ಶಿಬಿರ” ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುರಸ್ಕಾರವೂ ಲಭಿಸಿದೆ. 1992ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿಯೂ ಲಭಿಸಿಗಿದೆ ಅವರಿಗೆ. 2006ನೆಯ ಸಾಲಿನಲ್ಲಿ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ಕೂಡ ದೊರೆತಿದೆ… ಬಹುಮುಖಿ ಸಾಹಿತಿ ಅವರು– ವಿದೂಷಕ’, ‘ಆನಿ ಬಂತಾನಿ’, ‘ದಿಂಡಿ’ಯಂಥ ಅಸಂಗತ ನಾಟಕಗಳಿಂದ; ‘ಯಾತನಾ ಶಿಬಿರ’, ‘ಚರ್ಚ್‌ಗೇಟ್‌’, ‘ಗೋಹರಜಾನ್‌’, ‘ಮಾಲತಿ ಮತ್ತು ನಾನು’ ಇತ್ಯಾದಿ ಕಾದಂಬರಿಗಳಿಂದ; ಸಣ್ಣ ಕತೆಗಳಿಂದ; ಅನುವಾದಗಳಿಂದ ಸಹೃದಯರಲ್ಲಿ ಸ್ಥಾನ ಪಡೆದಿರುವ ಚಂದ್ರಕಾಂತ ಕುಸನೂರ ಅವರು ಚಿತ್ರಕಲಾವಿದರೆಂಬುದೂ ಬಹುಜನರಿಗೆ ಗೊತ್ತಿರಲಿಕ್ಕಿಲ್ಲ… ಅವರು ಯಾರೆದುರೂ ಹಾಗೆ ಹೇಳಿಕೊಳ್ಳುವ ಸ್ವಭಾವದವರಲ್ಲ ಎಂದ ಮೇಲೆ ಗೊತ್ತಾಗುವುದಾದರೂ ಹೇಗೆ? ಅವರ ನಿಕಟವರ್ತಿಗಳು, ಗೆಳೆಯರು ಮುಂದಾಗಿದ್ದರಿಂದ ಅವರು ಬರೆದ ಕೃತಿಗಳು ಪ್ರಕಟವಾದವು. ಕಲಾಕೃತಿಗಳು ಪ್ರದರ್ಶನಗೊಂಡವು..! ಇನ್ನೂ ಪ್ರಕಟವಾಗದ ಹಸ್ತಪ್ರತಿಗಳು, ಕಲಾಕೃತಿಗಳು ಅವರ ಭಂಡಾರದಲ್ಲಿ ಇವೆ. ಜಾಗದ ಕೊರತೆಯಿಂದ ಎಷ್ಟೋ ಚಿತ್ರಗಳನ್ನು ಸುಟ್ಟು ಹಾಕಿದ್ದೂ ಇದೆ. ಕುಸನೂರರು ಹೇಳುವುದೇನೆಂದರೆ ‘ನಾನು ವೈಯಕ್ತಿಕ ಖುಷಿಗಾಗಿ ಬರೆಯುತ್ತೇನೆ. ಚಿತ್ರ ಬಿಡಿಸುತ್ತೇನೆ. ನನ್ನ ಪಾಲಿಗೆ ಭಾಷೆ, ಬಣ್ಣದ ಜೊತೆಗಿನ ಅಭಿವ್ಯಕ್ತಿಯೇ ಲಿಬರೇಶನ್‌. ಕಲೆಯ ಅನುಸಂಧಾನದಲ್ಲಿ ನಾನು ದೈಹಿಕ, ಮಾನಸಿಕ ಒತ್ತಡಗಳಿಂದ ಬಿಡುಗಡೆಯಾಗುತ್ತೇನೆ. ಆನಂದ ಅನುಭವಿಸುತ್ತೇನೆ. ತುಂಬ ಕಷ್ಟದ ಸಂದರ್ಭದಲ್ಲಿ, ಬದುಕಿನ ಅತಂತ್ರ ಸ್ಥಿತಿಯಲ್ಲಿ ಈ ಕಲೆಗಳು ನನ್ನ ಕೈಹಿಡಿದಿವೆ. ನನ್ನ ವ್ಯಕ್ತಿತ್ವ ರೂಪಿಸಿವೆ’ ಎಂದು ಸಾದರಪಡಿಸಿದ್ದರು ಚಂದ್ರಕಾಂತ ಕುಸನೂರವರು..! ಈ ನಿಲುವಿನಿಂದಾಗಿಯೇ ಅವರು ತಾನು ಸಾಹಿತಿ, ಕಲಾವಿದನೆಂದು ಹೇಳಿಕೊಳ್ಳುವುದಕ್ಕೂ ಮುಜುಗರ ಪಡುದ್ದತ್ತಿರು. ಅವರು ಬರೆದ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ, ನಾಟಕ ಅಕಾಡೆಮಿ, ಲಲಿತಕಲಾ ಅಕಾಡೆಮಿಗಳಿಂದ ಪುಸ್ತಕ ಬಹುಮಾನಗಳು ಬಂದಿವೆ. ಜೊತೆಗೆ ಮೂರೂ ಅಕಾಡೆಮಿಗಳ ಗೌರವ ಪ್ರಶಸ್ತಿಗಳೂ ಬಂದಿವೆ. ಈ ತರಹದ ಗೌರವಕ್ಕೆ ಪಾತ್ರರಾದ ಸಾಹಿತಿ, ಕಲಾವಿದ ಇವರೊಬ್ಬರೇ ಇರಬಹುದು..! ಚಂದ್ರಕಾಂತ ಕುಸನೂರ ಎತ್ತರದ ನಿಲುವು. ಗಂಭೀರ ಮುಖ. ಸಮೀಪಕ್ಕೆ ಹೋಗಿ ಮಾತಾಡಿದರೆ ಗೊತ್ತಾಗುವುದು ಅವರ ಮೃದುವಾದ ಮಾತು, ಸ್ನೇಹಕ್ಕೆ ಹಂಬಲಿಸುವ ಮನಸ್ಸು. ಕುಸನೂರರು ಹುಟ್ಟಿ ಬೆಳೆದದ್ದು ಕಲಬುರ್ಗಿಯಲ್ಲಿ. ತಂದೆ ಪ್ರಾಥಮಿಕ ಶಾಲೆಯ ಶಿಕ್ಷಕರು. ಒಂದು ಸಣ್ಣ ಹಳ್ಳಿಯಲ್ಲಿ ಇರುತ್ತಿದ್ದರು. ಇವರು ಕಲಬುರ್ಗಿಯ ಕಕ್ಕನ ಅಂದರೆ ಚಿಕ್ಕಪ್ಪನ ಮನೆಯಲ್ಲಿದ್ದು ಓದಿದರು. ದೊಡ್ಡ ಕುಟುಂಬ, ದುಡಿಯುವವ ಒಬ್ಬನಾದರೆ, ಕೂತು ಉಣ್ಣುವವರು ಬಹಳ. ಕಷ್ಟದಲ್ಲಿಯೇ ಓದಿದವರು ಅವರು. ಆಗ ಆ ಊರಿನಲ್ಲಿ ಉರ್ದು ಮುಷಾಯರ್‌, ಹಿಂದಿ ಕವಿಗೋಷ್ಠಿಗಳು ಬಹಳ. ಆ ಪರಿಸರದ ಪ್ರೇರಣೆಯಿಂದ ಕುಸನೂರರು ಹಿಂದಿಯಲ್ಲಿ ಕವಿತೆ, ಕತೆ ಬರೆಯಲು ಪ್ರಾರಂಭಿಸಿದರು… ಒಮ್ಮೆ ಧಾರವಾಡದಲ್ಲಿ ಜರುಗಿದ ಬಹುಭಾಷಾ ಕವಿಗೋಷ್ಠಿಗೆ ಹೋದರು. ಇವರ ಹಿಂದಿ ಕವಿತೆ ಕೇಳಿದ ವರಕವಿ ಬೇಂದ್ರೆಯವರು ‘ಕನ್ನಡದಲ್ಲಿ ಕವಿತಾ ಬರಿ’ ಎಂದು ಅಪ್ಪಣೆ ಮಾಡಿದರು. ಅಲ್ಲಿವರೆಗೆ ಕನ್ನಡ ಓದಲು, ಬರೆಯಲು ಬಾರದ ಕುಸನೂರರು ಕನ್ನಡ ಕಲಿತು, ಕವಿತೆ ಬರೆದರು. ಶಾಂತರಸರ ಸ್ನೇಹ, ಸಹಕಾರದಲ್ಲಿ ‘ನಂದಿ ಕೋಲ’ ಎಂಬ ಮೊದಲ ಕವನ ಸಂಕಲನ ಪ್ರಕಟವಾಯಿತು..! ಹಿಂದಿ, ಉರ್ದು ಕವಿತೆಗೆ ಹೋಲಿಸಿದರೆ ಅವರಿಗೆ ಕನ್ನಡ ಅಭಿವ್ಯಕ್ತಿ ಕಷ್ಟವೆನಿಸುತ್ತಿತ್ತು. ಅದಕ್ಕಾಗಿಯೇ ಆರಂಭದಲ್ಲಿ ಕಡಿಮೆ ಕಾವ್ಯ ಪಂಕ್ತಿಯ ಜಪಾನಿನ ಹೈಕುವಿನಂಥ ರೂಪದಲ್ಲಿ ಪ್ರಯೋಗ ಮಾಡಿ ಕನ್ನಡಕ್ಕೆ ಹೈಕುಗಳನ್ನು ಪರಿಚಯಿಸಿದರು… ಹಾಗೆಯೇ ಅಸಂಗತ ನಾಟಕಗಳ ರಚನೆ, ಪಾಶ್ಚಾತ್ಯ ಸಾಹಿತ್ಯದ ವಿಪುಲ ಓದಿನಿಂದಾಗಿ ಕುಸನೂರರ ಬರವಣಿಗೆ ಹೊಸ ಮೆರುಗು ಪಡೆಯಿತು. ನವ್ಯ ಸಾಹಿತ್ಯದ ಸಂದರ್ಭದಲ್ಲಿ ಗಮನಾರ್ಹ ಎನಿಸಿತು… ಕುಸನೂರ ಅವರು ಉರ್ದು, ಹಿಂದಿ, ಕನ್ನಡ, ಮರಾಠಿ, ಇಂಗ್ಲಿಷ್‌ ಭಾಷೆಗಳನ್ನು ಚೆನ್ನಾಗಿ ಮಾತನಾಡುತ್ತಿದ್ದರು. ಓದುತ್ತಿದ್ದರು. ಬರೆಯುತ್ತಿದ್ದರು ಕೂಡ. ಸಂಸ್ಕೃತದ ಅಭ್ಯಾಸವೂ ಇತ್ತು. ಬೆಳಗಾವಿಗೆ ಬಂದ ಮೇಲೆ ಮರಾಠಿ ಕಲಿತು, ಕವಿತೆ, ಕಥೆ ಬರೆದರು ಚಂಕಾಂತ ಕೂಸನುರರು. ಅನಂತಮೂರ್ತಿಯವರ ‘ಸಂಸ್ಕಾರ’, ಆಲನಹಳ್ಳಿಯವರ ‘ಕಾಡು’ ಕೃತಿಗಳನ್ನು ಹಿಂದಿಗೆ ಅನುವಾದಿಸಿದ್ದಾರೆ ಅವರು… ಕನ್ನಡದಲ್ಲಂತೂ ಎಪ್ಪತ್ತಕ್ಕೂ ಹೆಚ್ಚು ರಚನೆಗಳನ್ನು ಮಾಡಿದ್ದಾರೆ. ಬಹುಭಾಷೆಗಳ ಜೊತೆಗಿನ ಈ ಹೊಕ್ಕು ಬಳಕೆ, ಆಟ ಒಡನಾಟವಿದ್ದಾಗಲೂ ನಿವೃತ್ತಿಯ ನಂತರ ಚಿತ್ರಕಲೆ ಅವರನ್ನು ಆವರಿಸಿಕೊಂಡಿತು. ವಿದ್ಯಾರ್ಥಿಯಾಗಿದ್ದಾಗಲೇ ಈ ಕಲೆ ಅವರನ್ನು ಆಕರ್ಷಿಸಿತು. ನೂತನ ವಿದ್ಯಾಲಯದಲ್ಲಿ ಓದುವಾಗ ಚಿತ್ರಕಲೆ ಕಡ್ಡಾಯ ವಿಷಯವಾಗಿತ್ತು. ಅದನ್ನು ಶಂಕರರಾವ್‌ ಆಳಂದಕರ ಕಲಿಸುತ್ತಿದ್ದರು. ಅವರು ಸುಪ್ರಸಿದ್ಧ ಕಲಾವಿದ ಎಸ್‌.ಎಂ.ಪಂಡಿತರಿಗೆ ಗುರುಗಳಾಗಿದ್ದರು. ಅವರ ಬಣ್ಣ, ರೇಖೆಗಳ ಆಟ ಸುಂದರವಾಗಿತ್ತಂತೆ. ಅವರ ಚಿತ್ರ ನೋಡಿ ಇವರಿಗೂ ಬಿಡಿಸಬೇಕು ಎನಿಸುತ್ತಿತ್ತು. ಆದರೆ ಬಣ್ಣ, ಬ್ರಷ್‌ ಖರೀದಿಸುವ ಸ್ಥಿತಿ ಅವಗಿರಲಿಲ್ಲ..! ಸಹಪಾಠಿ ಗುರುಪಾದಪ್ಪ ಧಂಗಾಪುರ (ಈಗ ಇವರು ಮುಂಬಯಿಯಲ್ಲಿ ಪ್ರಸಿದ್ಧ ಕಲಾವಿದರಾಗಿದ್ದಾರೆ) ನೆರವಾಗುತ್ತಿದ್ದರು. ಅಲ್ಲಿಂದ ಆ ಕಲೆಯ ಆಸಕ್ತಿ ಅವರಲ್ಲಿ ಗುಪ್ತಗಾಮಿನಿಯಾಗಿಯೇ ಉಳಿಯಿತು. ಅದು ಪ್ರಕಟವಾಗಿ ಧುಮ್ಮಿಕ್ಕುವಂತಾದದ್ದು ನಿವೃತ್ತಿಯ ನಂತರ. ಕುಸನೂರರ ಚಿಂತನೆ, ಸೃಜನಶೀಲತೆಗೆ ಒಗ್ಗಿದ್ದು ಅಮೂರ್ತ ಚಿತ್ರಕಲೆ. ಕೆಂಪು, ಹಸಿರು, ಹಳದಿ ಬಣ್ಣಗಳ ರಭಸ. ಅವುಗಳ ಸಂಯೋಜನೆಯಿಂದ ಅವರ ಕಲಾಕೃತಿಗಳು ಆಕರ್ಷಕವಾಗಿರುತ್ತವೆ, ಕಣ್ಣಿಗೆ ಸುಖ ನೀಡುತ್ತವೆ. ತಮ್ಮಷ್ಟಕ್ಕೇ ತೆಗೆದು ಮನೆಯಲ್ಲಿ ಪೇರಿಸಿಡುತ್ತಿದ್ದರು. ಒಂದು ಸಾರಿ ತರುಣ ಕಲಾವಿದರು ಅವರ ಮನೆಗೆ ಹೋಗಿ ನೋಡಿ ಬೆರಗಾದರು… ಪ್ರದರ್ಶನವಿಲ್ಲದೇ ಹಾಗೇ ದೂಳು ತಿನ್ನುತ್ತ ಬಿದ್ದುಕೊಂಡಿದ್ದ ಅವುಗಳನ್ನು ಹೊರಕ್ಕೆ ಎಳೆದು ಅಲ್ಲಲ್ಲಿ ಪ್ರದರ್ಶನಕ್ಕೆ ಏರ್ಪಾಟು ಮಾಡಿದರು. ಬೆಂಗಳೂರು, ಮುಂಬಯಿ, ಕೋಲ್ಕತ್ತ, ದೆಹಲಿಗಳಲ್ಲಿ ಕಲಾಕೃತಿಗಳು ಪ್ರದರ್ಶನಗೊಂಡಿವೆ. ಕೆಲವು ಮಾರಾಟವಾಗಿವೆ. ಬಂದ ದುಡ್ಡಿನಲ್ಲಿ ಮತ್ತೆ ಬಣ್ಣ, ಕ್ಯಾನ್ವಾಸ್‌ ಖರೀದಿಸಿ ಕಲಾಕೃತಿಗಳ ರಚನೆಯಲ್ಲಿಯೇ ಆನಂದ ಅನುಭವಿಸುವುದು ಕುಸನೂರರ ಸ್ವಭಾವ. ಅವರ ಪ್ರಕಾರ ಅನುಭವದ ಅಭಿವ್ಯಕ್ತಿ ಚಿತ್ರಕಲೆಯಲ್ಲಿ ಹೇಗೆ ಸಾಧ್ಯವೋ ಹಾಗೆ ಭಾಷೆಯಲ್ಲಿ ಸಾಧ್ಯವಿಲ್ಲ. ಒಂದೊಂದು ಭಾಷೆಗೂ ನಿರ್ದಿಷ್ಟ ವ್ಯಾಕರಣವಿದೆ. ಒಂದು ಶಿಸ್ತು ಇದೆ. ಸಾಹಿತಿಯಾದವನು ಅದರ ಮಿತಿಯಲ್ಲಿಯೇ ಬರೆಯಬೇಕು… ಅದಕ್ಕಿರುವ ಓದುಗರ ಬಳಗವೂ ಸೀಮಿತವಾಗಿರುತ್ತದೆ. ಇದಕ್ಕೆ ಹೋಲಿಸಿದಾಗ ಚಿತ್ರಕಲೆ ಅಭಿವ್ಯಕ್ತಿಯ ಸಶಕ್ತ ಮಾಧ್ಯಮ ಎನಿಸುತ್ತದೆ. ಅದನ್ನು ನೋಡುವ ರಸಿಕರ ಬಳಗವೂ ದೊಡ್ಡದು ಇದೆ… ‘ ‘ಚಿತ್ರಕಲೆಯಲ್ಲಿ ನಾನು ಹೆಚ್ಚು ಸ್ವಾತಂತ್ರ್ಯ ಅನುಭವಿಸುತ್ತೇನೆ. ಸಂತೋಷವನ್ನು ಕೂಡ’ ಎಂದು ಕುಸನೂರ ಚಿತ್ರಕಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಕಲಾಕೃತಿಗಳು, ಬಣ್ಣದ ಹೊಂದಾಣಿಕೆ, ಅವುಗಳ ಪರಿಣಾಮ, ಕಲಾವಿದರ ವ್ಯಕ್ತಿತ್ವದ ಬಗ್ಗೆ ಪ್ರೇಕ್ಷಕರ ರಸಗ್ರಹಣ ಕುರಿತು ಕುಸನೂರರು ಸೊಗಸಾಗಿ ಮಾತನಾಡುತ್ತಿದ್ದರು. ಆ ಕುರಿತು ಆಳವಾಗಿ ಅಧ್ಯಯನ ಮಾಡಿದ್ದರು ಅವರು… ಇವರು ಬರೆದ ‘ಕಲೆ: ಅನುಭವ, ಅನುಭಾವ’ ಕೃತಿಗೆ ಲಲಿತ ಕಲಾ ಅಕಾಡೆಮಿಯ ಪುಸ್ತಕ ಬಹುಮಾನವೂ ದೊರೆತಿದೆ. ಇವರ ‘ಕಲಾನುಭವ’ ಎಂಬ ಕೃತಿಯನ್ನು ಅಕಾಡೆಮಿಯೇ ಪ್ರಕಟಿಸಿತು..! ಚಂದ್ರಕಾಂತ ಕುಸನೂರರಿಗೆ ಅಂತಿಮ ನಮನ— ಬೆಳಗಾವಿಯ ರಾಣಿ ಚನ್ನಮ್ಮ ನಗರದ ಎರಡನೇ ಹಂತದಲ್ಲಿರುವ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನರಾಗಿದ್ದ ನಾಡಿನ ಹಿರಿಯ ಸಾಹಿತಿ ಚಂದ್ರಕಾಂತ ಕುಸನೂರ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಭಾನುವಾರ ಬೆಳಗಿನ ಜಾವ 2ಗಂಟೆ ಸುಮಾರಿಗೆ ಶಾಹಪುರ ಸ್ಮಶಾನ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಗ್ನಿಸ್ಪರ್ಶ ಮಾಡಿ ನೆರವೇರಿಸಲಾಯಿತು. ಕಿರಿಯ ಮಗ ಗುರುರಾಜ ಕುಸನೂರ ಅಗ್ನಿಸ್ಪರ್ಶ ಮಾಡಿದರು. ಕೊವಿಡ್-,19 ನಿಯಮಾವಳಿಗಳನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕ ವಿಧಿಗಳನ್ನು ಪೂರೈಸಲಾಯಿತು. ಕುಟುಂಬ ವರ್ಗದವರು, ಸಾಹಿತಿಗಳು, ಒಡನಾಡಿಗಳು, ಚಿತ್ರಕಲಾವಿದ ಬಾಳು ಸದಲಗೆ, ಸಾಹಿತಿಗಳಾದ ಶಿರೀಶ ಜೋಶಿ, ಬಿ.ಕೆ. ಕುಲಕರ್ಣಿ, ಬ್ಯಾಂಕ್ ನ ನಿವೃತ್ತ ಅಧಿಕಾರಿ ರಘುನಾಥ ಮುತಾಲಿಕ, ಮಾಜಿ ನಗರ ಸೇವಕಿ ಶೀಲಾ ದೇಶಪಾಂಡೆ ಮತ್ತು ನಾಗರಿಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ನಮನ ಸಲ್ಲಿಸಿದರು. ಚಂದ್ರಕಾಂತ ಕುಸನೂರ ಅವರ ನಿಧನಕ್ಕೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ… ********* ಕೆ.ಶಿವು.ಲಕ್ಕಣ್ಣವರ –

ವಿದಾಯ Read Post »

ಇತರೆ

ಪ್ರಸ್ತುತ

ಕೋರೋನದ ತಲ್ಲಣಗಳು ಎನ್ . ಶೈಲಜಾ ಹಾಸನ,   ಕೋರೋನದ ತಲ್ಲಣಗಳು ಸರಾಗವಾಗಿ ಹರಿಯುತ್ತಿದ್ದ ಬದುಕಿನ ಬಂಡಿ ಕನಸಿನಲ್ಲಿಯೂ ನೆನೆಸದಂತೆ ನಿಂತು ಬಿಟ್ಟಿತು.ಅದೇನಾಗಿ ಹೋಯಿತೋ,ಕಂಡರಿಯದ ವೈರಾಣವೊಂದು ಇಡಿ ಪ್ರಪಂಚವನ್ನೆ ತಲ್ಲಣಗೊಳಿಸಿಬಿಟ್ಟಿದೆ. ದೂರದ ಅದ್ಯಾವುದೋ ದೇಶದಲ್ಲಿ ಅದೆಷ್ಟೋ ಪ್ರಾಣಗಳನ್ನು ತೆಗೆಯುತ್ತಿದೆ , ಅದೆಷ್ಟೋ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ ಅಂತೆ ಅಂತ ದೃಶ್ಯ ಮಾಧ್ಯಮಗಳಲ್ಲಿ ನೋಡುತ್ತಾ ಅಯ್ಯೋ ಪಾಪ ಅಂತ ಕನಿಕರ ಪಡುತ್ತಿರುವಾಗಲೆ ದಿಢೀರನೆ ನಮ್ಮ ದೇಶಕ್ಕೂ ಆ ಕ್ಷುದ್ರ ವೈರಸ್ ಬಂದು ಅಪ್ಪಳಿಸಿದೆ ಅಂತ ಗೊತ್ತಾದಾಗ ದಿಗಿಲು ಹುಟ್ಟಿಸಿದ್ದು ನಿಜಾ.ದಿನದಿನಕ್ಕೂ ಅದರ ಹಾವಳಿ ಹೆಚ್ಚಾದಾಗ ಮನೆಯಿಂದ ಹೊರಬರಲು ಆತಂಕವಾದರೂ ಉದ್ಯೋಗದ ನಿಮಿತ್ತ ಹೊರ ಹೋಗಲೇ ಬೇಕಿತ್ತು. ಸ್ವಂತ ವಾಹನವಿದ್ದರೂ ಬಸ್ ನಿಲ್ದಾಣದಲ್ಲಿ ಬಿಟ್ಟು, ನೂರಾರು ಜನ ಪ್ರಯಾಣಿಸುವ ಬಸ್ ನಲ್ಲಿ ಹೋಗುವಾಗ ಜೀವ ಕೈಯಲ್ಲಿಟ್ಟು ಕೊಂಡು ಹೋಗಬೇಕಾಗಿತ್ತು. ಉದ್ಯೋಗ ನಿಮಿತ್ತ ಪಯಣಿಸುವ ಹಾದಿ ರಾಷ್ಟ್ರೀಯ ಹೆದ್ದಾರಿ ಆದ್ದರಿಂದ ಸ್ವಂತ ವಾಹನದಲ್ಲಿ ಹೋಗಲು ಒಬ್ಬಳೆ ಪತ್ನಿಯನ್ನು ಕಳಿಸಲು ಪತಿಗೆ ಹಾಗು ಒಬ್ಬಳೆ ಅಮ್ಮನಿರುವ ಮಗಳಿಗೆ ಆತಂಕ. ಹಾಗಾಗಿ ಬಸ್ ನಲ್ಲಿ ಪ್ರಯಾಣ ಅನಿವಾರ್ಯ. ಬಸ್ಸಿಳಿದು ಶಾಲೆ ತಲುಪಿದ ಕೂಡಲೆ ಸೋಪಿನಿಂದ ಕೈ ತೊಳೆದು ನಂತರವೆ ಮುಂದಿನ ಕೆಲಸ.ಯಾರಾದರೂ ಕೆಮ್ಮು ಶೀತ ಜ್ವರ ಅಂದರೆ ಎದೆಯಲಿ ಪುಕ ಪುಕ.ಕರ್ತವ್ಯ ಮುಗಿಸಿ ಮತ್ತೆ ಬಸ್ಸಿನಲ್ಲಿ ಪ್ರಯಾಣ.ಮನೆಗೆ ಬಂದ ಕೂಡಲೆ ಮತ್ತೆ ಸೋಪಿನಿಂದ ತಿಕ್ಕಿ ತಿಕ್ಕಿ ಕೈ ತೊಳೆದು ಕೊಂಡ ಮೇಲೆ ಅಡುಗೆ ಮನೆ ಪ್ರವೇಶ. ಆ ಆತಂಕದ ದಿನಗಳಲ್ಲಿ ಅಂತೂ ಇಡೀ ದೇಶವೇ ಲಾಕ್ ಡೌನ್ ಅಂತ ಸರ್ಕಾರ ಘೋಷಿಸಿ ಬಿಟ್ಟಾಗ ಆತಂಕದ ನಡುವೆಯೂ ನಿರಾಳ ಭಾವ. ಈಗ ಮನೆಯವರೆಲ್ಲ ಮನೆಯಲ್ಲಿಬಂದಿಗಳು.ಹೊರಹೋಗುವಂತಿಲ್ಲ,ಯಾರೂ ಮನೆಗೆ ಬರುವಂತೆ ಇಲ್ಲ.ದಿನಾ ಟಿ.ವಿ.ನೋಡುವುದು, ಅಡುಗೆ ಮಾಡಿ ತಿನ್ನುವುದು, ಮನೆಕೆಲಸ ಮಾಡುವುದು, ಓದುವುದು, ಬರೆಯುವುದು, ಈ ರೀತಿಯ ಬದುಕು ಹೊಸದು.ಹಿಂದೆಲ್ಲ ವರ್ಷಕ್ಕೆ ಎರಡು ಬಾರಿ ತಿಂಗಾಳುಗಟ್ಟಲೆ ನಮ್ಮ ಇಲಾಖೆಯಲ್ಲಿ ರಜೆ ಸಿಗುತ್ತಿದ್ದರೂ, ಪ್ರವಾಸ, ಬಂಧು ಬಳಗದವರ ಮನೆಗೆ ಭೇಟಿ, ಅವರು ನಮ್ಮ ಮನೆಗೆ ಭೇಟಿ, ಶಾಪಿಂಗ್, ಹೋಟೆಲ್, ಮದುವೆ , ಗೃಹ ಪ್ರವೇಶ ಮುಂತಾದ ಕಾರ್ಯಕ್ರಮಗಳು ಹೀಗೆ ಮನೆಯಲ್ಲಿ ಇರುವುದೇ ಅಪರೂಪವಾಗಿತ್ತು. ಆದರೆ ಈ ರಜೆ ಹಾಗಲ್ಲ. ಇಡೀ ದಿನ ಮನೆಯಲ್ಲಿ ಸೆರೆ. ನನಗಂತೂ ಇಂತಹ ರಜೆಯಲ್ಲಿ ಮನೆಯಲ್ಲಿಯೇ ಇರುವುದು ಮೊದಲ ಬಾರಿ. ಮನದಲ್ಲಿ ಆತಂಕ, ತಳಮಳ, ಈ ವೈರಸ್ ನಿಂದಾಗಿ ಇಡೀ ಜೀವನದಲ್ಲಿ ಒಮ್ಮೆಯಾದರೂ ಕಾಣ ಸಿಗದ ಅನಿಶ್ಚಿತತೆಯ, ಉದ್ವೇಗದ ಅನುಭವ ಇದು.ಅಸಾಧ್ಯ ಎನಿಸಿದ ಎಲ್ಲವನ್ನೂ ಸಾಧ್ಯವಾಗಿಸಿದ ಸಂದರ್ಭದಲ್ಲಿ ಬದುಕು ಜನಗಳಿಗೆ ಏನೇನೋ ಕಲಿಸಿದೆ.ಏನಿಲ್ಲದಿದ್ದರೂ ಬದುಕುವ ಛಲ ,ಸಾವಿರಾರು ಮೈಲು ದೂರ ನಡೆದು ಬದುಕು ಉಳಿಸಿಕೊಳ್ಳುವ ಶಕ್ತಿ, ತಾಳ್ಮೆ, ನೂರಾರು ಸಂಕಷ್ಟಗಳಿಗೆ ಮಿಡಿಯುವ ಮನಸ್ಸುಗಳು,ಜಾತಿ,ಕುಲ,ಧರ್ಮಕ್ಕಿಂತ ಮಾನವೀಯತೆ ದೊಡ್ಡದು ಅನ್ನೋ ವಾಸ್ತವ ,ಶುಭ್ರ ಆಕಾಶ,ಮಲೀನತೆಯಿಂದ ಹೊರಬಂದ ಪರಿಸರ, ಮನುಷ್ಯರಿಲ್ಲದ ರಸ್ತೆಗಳಲ್ಲಿ ನಿರಾಂತಕವಾಗಿ ಕುಣಿದಾಡುತ್ತಿರುವ ಪ್ರಾಣಿ ಪಕ್ಷಿಗಳು ಇವೆಲ್ಲವೂ ಆಶಾದಾಯಕವೆ ಆಗಿದೆ. ಪ್ರಾಣವನ್ನು ಒತ್ತೆ ಇಟ್ಟು ರೋಗಿಗಳನ್ನು ಬದುಕಿಸಲು ತಮ್ಮವರೆಲ್ಲರಿಂದಲೂ ದೂರವಿದ್ದೂ ಕಷ್ಟಪಡುತ್ತಿರುವ ವೈದ್ಯ ದೇವರುಗಳು, ನರ್ಸ್ಗಳು,ದಾದಿಗಳು, ಆರೋಗ್ಯ ಇಲಾಖೆ ಯವರು,ಕಾನೂನು ಕಾಪಾಡುತ್ತಿರುವ ಪೋಲೀಸರು, ಕಷ್ಟಗಳಿಗೆ ಮರುಗಿ ಸಹಾಯ ಹಸ್ತ ನೀಡುತ್ತಿರುವ ಕರುಣಾಮಯಿಗಳು, ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸ್ಪಂದಿಸುತ್ತಿರುವ ಮಾನವೀಯತೆಯ ಸಕಾರಮೂರ್ತಿಗಳು.ಈ ಸಂಕಷ್ಟದಿಂದ ಪಾರಾಗಲು ದುಡಿಯುವ ಮಂತ್ರಿ ಮಹೋದಯರು, ರಾಜಕಾರಣಿ ಗಳು ಇವರೆಲ್ಲರ ಪರಿಶ್ರಮ ಸಂಕಷ್ಟ ದಿನಗಳಲ್ಲಿ ವ್ಯರ್ಥ ವಾಗದ ಸಾರ್ಥಕ ವಾಗಲಿ. ಆದರೆ, ಕೆಲವು ಮೂರ್ಖರಿಂದ ಅಸಹಕಾರ, ವಾಪಾಸು ಕಳ್ಳಿಯಂತೆ ಕೊರೋನ ವೈರಸ್ಸಿಗಿಂತ ವೇಗವಾಗಿ ಹಬ್ಬಿ ಸಮಾಜದ ಸ್ವಾಸ್ಥ್ಯ ಕದಡುತ್ತಿರುವ ಕೋಮುವಾದ, ಒಳಗೊಳಗೆ ಸ್ಫೋಟಗೊಳ್ಳಲು ಸಿದ್ದವಾಗಿರುವ ಕುದಿಯುತ್ತಿರುವ ಮನಸ್ಸುಗಳು , ಕೆಲಸವಿಲ್ಲದೆ ,ತಿನ್ನಲು ಅನ್ನವಿಲ್ಲದೆ ಅತಂತ್ರಗೊಂಡಿರುವ , ನಿರ್ಗತಿಕ ಕೆಲಸಗಾರರು, ಕನಿಷ್ಠ ಸವಲತ್ತುಗಳನ್ನು ಪಡೆಯಲು ಹೆಣಗಾಡುತ್ತಿರುವ ಕಾರ್ಮಿಕರು, ತಮ್ಮದಲ್ಲದ ತಪ್ಪಿಗೆ ರೋಗ ಅಂಟಿಸಿಕೊಂಡು ಸಾವಿನ ಕೂಪಕ್ಕೆ ಬೀಳುತ್ತಿರುವ ಕೆಲ ದುರಾದೃಷ್ಟ ವಂತರು, ನಿರ್ಲಕ್ಷ್ಯದಿಂದ ,ದುರಾಂಕಾರದಿಂದ , ಧರ್ಮಾಂಧ ತೆಯಿಂದ ರೋಗ ಅಂಟಿಸುತ್ತಿರುವ ನೀಚರು ಇವೆಲ್ಲವನ್ನೂ ಈ ಸಂದರ್ಭದಲ್ಲಿ ನೋಡುತ್ತಾ, ನೋಡುತ್ತಾ ಮನಸ್ಸಿನಲ್ಲೇ ತಳಮಳಿಸುವಂತಾಗಿದೆ. ಎಲ್ಲವನ್ನೂ ನೋಡುತ್ತಾ ಕಲಿಯಬೇಕಾದ ಸಮಯ.ಎಲ್ಲವು ಇದ್ದು ಏನೂ ಇಲ್ಲದ ಭಾವ. ಕಷ್ಟದ ದಿನಗಳಲ್ಲಿ ಎಲ್ಲರಿಗೂ ಒದಗಿ ಬರಲಾರದ ಅಸಹಾಯಕತೆ ಕಾಡುತ್ತಿರುವುದು ನಿಜವೇ ಆಗಿದೆ. ಮುಂದೇನು ಅನ್ನುವ ಅನಿಶ್ಚಿತತೆ, ಈ ಮಹಾ ಖಾಯಿಲೆಯಿಂದ ಇಷ್ಟೇಲ್ಲಾ ಎಚ್ಚರಿಕೆ ವಹಿಸಿಯೂ ಬದುಕುತ್ತೇವೆಯೋ, ಬದುಕಿದರೂ ಮುಂದೇನು ಸಂಕಷ್ಟಗಳು ಕಾಡುತ್ತವೆಯೊ, ಮತ್ತೆ ಹಿಂದಿನಂತೆ ಇರಲು ಸಾಧ್ಯವೇ.ಆರ್ಥಿಕವಾಗಿ ಅದೆಷ್ಟೋ ವರ್ಷಗಳ ಹಿಂದಕ್ಕೆ ಹೋಗಬೇಕಾಗಿದೆಯೋ.ಎಲ್ಲವನ್ನು ಸರಿಪಡಿಸಲು ಇನ್ನೂ ಅದೆಷ್ಟು ವರ್ಷಗಳು ಬೇಕಾಗುತ್ತವೆಯೋ.ಊಹಿಸಿಕೊಳ್ಳಲೇ ದಿಗಿಲಾಗುತ್ತದೆ. ಕೆಳವರ್ಗದ, ಮೇಲುವರ್ಗದ, ಸರ್ಕಾರಿ, ಖಾಸಗಿ ವರ್ಗದ ನೌಕರರು,ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್ ಉದ್ಯೋಗಿ ಗಳು, ಸಣ್ಣ ಪುಟ್ಟ ಕೈಗಾರಿಕೆಗಳ ಮಾಲೀಕರು, ಪತ್ರಿಕೆಗಳ ಮಾಲಿಕರು,ಅಲ್ಲಿ ಕೆಲಸಗಾರರು, ಕಟ್ಟಡ ನಿರ್ಮಾಣ ಕೆಲಸ ಮಾಡುವ ಪತ್ರಕರ್ತರು , ಕೆಲಸದವರು,ರೈತರು, ಹೋಟೆಲ್ ಉದ್ಯಮ ಒಂದೇ ಎರಡೇ ಇವರೆಲ್ಲರ ಪರಿಸ್ಥಿತಿ ಮುಂದೆ ಏನಾಗಬಹುದು, ಯಾವ ರೀತಿಯ ಆರ್ಥಿಕ ಸಂಕಷ್ಟದ ಬಿರುಗಾಳಿ ಬೀಸ ಬಹುದು ಎಂಬುದನ್ನು ಊಹಿಸಿದರೆ ಎದೆ ನಡುಗುತ್ತದೆ.ಪ್ರಾಯಶ ಕೊರೋನ ವೈರಸ್ ಧಾಳಿಯ ಸಾವಿಗಿಂತಲೂ ನಂತರದ ದಿನಗಳಲ್ಲಿ ಬದುಕುವ ದಾರಿ ಮುಚ್ಚಿ ಹೋಗಿ ಸಾವು ಬಯಸುವ ಸಂಖ್ಯೆ ಹೆಚ್ಚಾಗುವ ಭಯ ಕಾಡದೆ ಇರದು.ಈ ಎಲ್ಲಾ ಭಯಗಳು ನಡುವೆಯೂ ಭರವಸೆಯ ಬೆಳಕನ್ನು ಹಿಡಿದು ಬದುಕಲೇ ಬೇಕಾಗಿದೆ.ಒಳ್ಳೆಯದಾಗಬಹುದು ಅನ್ನೂ ನಿರೀಕ್ಷೆಯಲಿ ಇವತ್ತಿನ ಆತಂಕದ ದಿನಗಳನ್ನು ತಳ್ಳಬೇಕಾಗಿದೆ. *****************************

ಪ್ರಸ್ತುತ Read Post »

ಇತರೆ

ನೆನಪು

ದಾವಣಗೆರೆಯ ಕಪ್ಪು ಗುಲಾಬಿ ಮಲ್ಲಿಕಾರ್ಜುನ ಕಡಕೋಳ ಕಣ್ಮರೆಯಾದ ದಾವಣಗೆರೆಯ ಕಪ್ಪು ಗುಲಾಬಿ ಆ ಪುಟ್ಟ ಕಂದನಿಗೆ ಎರಡು ವರ್ಷವೂ ತುಂಬಿರಲಿಲ್ಲ. ಮೊಲೆಹಾಲು ಕುಡಿಯುವ ಆ ಹಸುಳೆಯ ತಂದೆ ಜೈಲು ಸೇರಬೇಕಾದ ದುಃಸ್ಥಿತಿ. ಅವರೇನು ಕಳ್ತನ, ದರೋಡೆ ಮಾಡಿ ಜೈಲು ಸೇರಿದ್ದಲ್ಲ. ಮಿಲ್ಲುಗಳಲ್ಲಿ ದುಡಿಯುವ ಕೂಲಿ ಕಾರ್ಮಿಕರ ಪರವಾಗಿ ಹೋರಾಟ ಮಾಡಿ ಕಾರಾಗೃಹ ಸೇರಬೇಕಾಯ್ತು. ದಿಟ್ಟ ಹೋರಾಟಕ್ಕೆ ಸಿಕ್ಕ ಕೆಟ್ಟ ಪ್ರತಿಫಲ ಎಂಬಂತೆ ಒಂದಲ್ಲ ಎರಡು ಬಾರಿ, ಒಟ್ಟು ಹದಿನಾಲ್ಕು ವರುಷ ಈ ತಂದೆ ಜೈಲು ಪಾಲಾದರು. ತಂದೆಯ ಅನುಪಸ್ಥಿತಿಯಲ್ಲೇ ಈ ಪುಟ್ಟ ಬಾಲಕ ಧೃತಿಗೆಡದೇ ಸಂಕಟದ ಬಾಲ್ಯ ಕಳೆಯುತ್ತಾನೆ. ಅವನ ತಾಯಿ ನಾಗರತ್ನಮ್ಮ ಪಕೋಡ ಮಾರಿ ಮಗನನ್ನು ಸಲಹುತ್ತಾಳೆ. ಅರವತ್ತರ ದಶಕದಲ್ಲಿ ಅಂದು ಸೆರೆಮನೆವಾಸಿಯಾಗಿದ್ದ ತಂದೆಯ ಹೆಸರು ಕಾಮ್ರೇಡ್ ಎಂ. ಜಿ. ತಿಪ್ಪೇಸ್ವಾಮಿ. ಕಂದನ ಹೆಸರು ಎಂ. ಟಿ. ಸುಭಾಷ್. ವರ್ತಮಾನದ ಕಾಂಗ್ರೆಸ್ ಪಕ್ಷದ ಯುವ ಮುಖಂಡನೇ ನಮ್ಮ ಸುಭಾಷ್, ಅವರ ತಂದೆ ಕಾಂ. ಎಂ.ಜಿ. ತಿಪ್ಪೇಸ್ವಾಮಿ ಮೊನ್ನೆಯಷ್ಟೇ (೦೪.೦೩.೨೦೨೦) ತೀರಿಕೊಂಡರು. ಎಂ.ಜಿ.ಟಿ. ಅವರು ಎಂಬತ್ತೊಂದು ವರ್ಷಗಳ ತುಂಬು ಜೀವನ ಬಾಳಿ ಬದುಕಿದವರು. ಅವರು ಅಕ್ಷರಶಃ ಹೋರಾಟದ ಕಿಚ್ಚಿನ ಹಿರಿಯ ಚೇತನ. ಜೈಲಿಗೆ ಹೋಗಿ ಬಂದವರಿಗು, ಮತ್ತು ಅವರನ್ನು ನೋಡುವ ಸಮಾಜಕ್ಕು ಒಂದು ಬಗೆಯ ಮುಜುಗರ, ಕಳಂಕದ ಕನವರಿಕೆಗಳು. ಆದರೆ ತಿಪ್ಪೇಸ್ವಾಮಿ ಅಳುಕಲಿಲ್ಲ, ಅಂಜಲಿಲ್ಲ. ಫೀನಿಕ್ಸ್ ಪಕ್ಷಿಯಂತೆ ಬೂದಿ ತುಂಬಿದ ಕೆಂಡ ಕೊಡವಿಕೊಂಡು, ರೆಕ್ಕೆ ಜಾಡಿಸಿಕೊಂಡೆದ್ದು ನಿಂತರು. ದಾವಣಗೆರೆಯಲ್ಲಿ ಭಾರತ ಕಮ್ಯುನಿಸ್ಟ್ ಪಾರ್ಟಿಯನ್ನು ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ಕಟ್ಟುವಲ್ಲಿ ಪಂಪಾಪತಿ ಅವರಿಗೆ ಹೊಯ್ ಕೈಯಾಗಿ ಶ್ರಮಿಸಿದರು. ಅದರ ಫಲವಾಗಿ ನಗರಸಭೆ ಆಡಳಿತದ ಚುಕ್ಕಾಣಿಯನ್ನು ಹಿಡಿದು ಪಂಪಾಪತಿ ನಗರಸಭಾಧ್ಯಕ್ಷರಾದರು. ದಾವಣಗೆರೆ ನಗರಕ್ಕೆ ಹಸಿರು ಮತ್ತು ಉಸಿರನ್ನು ತಂದುಕೊಟ್ಟ ಪಂಪಾಪತಿ ಮತ್ತು ಕಮ್ಯುನಿಸ್ಟ್ ಪಾರ್ಟಿಯನ್ನು ಈ ಊರು ಇನ್ನೂ ನೂರು ವರ್ಷ ಕಳೆದರೂ ಮರೆಯುವಂತಿಲ್ಲ. ಅಂತಹ ಮರೆಯಲಾಗದ ಹತ್ತು ಹಲವು ಕೆಲಸಗಳಲ್ಲಿ ಎಂ.ಜಿ.ಟಿ. ಅವರಿಗೂ ಸಿಂಹಪಾಲಿದೆ. ಅಷ್ಟು ಮಾತ್ರವಲ್ಲದೆ ಕಾಂ. ಪಂಪಾಪತಿ ಅವರು ನಿರಂತರವಾಗಿ ಮೂರು ಅವಧಿಗೆ ದಾವಣಗೆರೆ ಶಾಸಕರಾಗಿ ಆಯ್ಕೆಯಾದರು. ಅದರ ಹಿಂದಿನ ದಿವಿನಾದ ಶಕ್ತಿಗಳಲ್ಲಿ ಎಂ.ಜಿ.ಟಿ. ಡೆಮಾಕ್ರಸಿಯು ದೈತ್ಯ ಶಕ್ತಿಯಂತೆ ಕೆಲಸ ಮಾಡಿದ್ದನ್ನು ಯಾರೂ ಮರೆಯಲಾಗದು. ಅವು ಅರವತ್ತರ ದಶಕದ ದಿನಮಾನಗಳು. ಡಾವಣಗೇರಿಯೆಂಬ ಗಿರಣಿಗಳ ನಗರಿಯಲ್ಲಿ ಶ್ರಮಸಂಸ್ಕೃತಿಯ ಕೆಂಬಾವುಟ ಮುಗಿಲೆತ್ತರಕ್ಕೆ ಹಾರಾಡಲು ಶುರುವಿಟ್ಟುಕೊಂಡ ಕಾಲಮಾನ. ಕಾಂ. ಮಾಣಿಕ್ಕಂ ಪಂಪಾಪತಿ ೧೯೫೫ ರ ಸುಮಾರಿಗೆ ದಾವಣಗೇರಿಗೆ ಬರುವ ಪೂರ್ವದಲ್ಲೇ ದಾವಣಗೆರೆಯಲ್ಲಿ ಕಮ್ಯುನಿಸ್ಟ್‌ ಪಾರ್ಟಿ ಇತ್ತು. ಕಾಂ. ಬಿ. ವಿ. ಕಕ್ಕಿಲಾಯ ಅವರ ಮಾರ್ಗದರ್ಶನದಲ್ಲಿ ಕಮ್ಯುನಿಷ್ಟ್ ಪಕ್ಷದ ಕಾರ್ಯಚಟುವಟಿಕೆಗಳ ಕೆಂಬಾವುಟವನ್ನು ಪತ್ರಕರ್ತ “ಪುಢಾರಿ” ಮುರಿಗಯ್ಯ, ಮಲಕಪ್ಪ, ವಕೀಲರಾದ ಎಚ್. ಎಸ್. ರಾಮಚಂದ್ರರಾಯರು ಹಾಳತವಾಗಿ ಹಾರಿಸಿದ್ದುಂಟು. ಹೊಸಪೇಟೆಯಿಂದ ಬಂದ ಅಗಮುಡಿ ಮೊದಲಿಯಾರ ಜನಾಂಗದ ಪಂಪಾಪತಿ, ದಾವಣಗೆರೆ ಕಾಟನ್ ಮಿಲ್ ಕಾರ್ಮಿಕನಾಗಿ ಕಸ ಹೊಡೆಯುವ ಕೆಲಸಕ್ಕೆ ಸೇರಿದ ಮೇಲೆ ಕೂಲಿ ಕಾರ್ಮಿಕರನ್ನು ಸಂಘಟಿಸುತ್ತಾರೆ. ಆಗ ಪಂಪಾಪತಿ‌ ಹೇಳುತ್ತಿದ್ದುದು : ಚಂದ್ರೋದಯ ಮಿಲ್ಲಿನ ಎಚ್. ಕೆ. ರಾಮಚಂದ್ರಪ್ಪ, ಗಣೇಶರ ಮಿಲ್ಲಿನ ಎಂ.ಜಿ. ತಿಪ್ಪೇಸ್ವಾಮಿ ಈ ಇಬ್ಬರೂ ನನಗೆ ಎಡಗೈ ಬಲಗೈಗಳಿದ್ದಂತೆ. ಆಗ ಕಾಂ. ಆನಂದತೀರ್ಥ ಅವರು ದಾವಣಗೆರೆ ಕಮ್ಯುನಿಸ್ಟ್ ಪಾರ್ಟಿಯ ಬ್ರೇನ್ ಆಗಿದ್ದರು. ಮುಖ್ಯವಾಗಿ ಕಾರ್ಮಿಕರ ಪರ ಹೋರಾಟದಲ್ಲಿ ಮಡಿದ ಹಿರಿಯರಾದ ಕಾಂ.ಸುರೇಶ್ ಮತ್ತು ಕಾಂ. ಶೇಖರಪ್ಪ ಅವರು ಕಾರ್ಮಿಕ ಹೋರಾಟದ ಮುಂಚೂಣಿ ನಾಯಕರೆಂಬುದು ಯಾರೂ ಮರೆಯಲಾಗದು. ಡಾವಣಗೇರಿ, ದುಡಿಯುವ ವರ್ಗಗಳ ಪ್ರೀತಿ ಸೌಹಾರ್ದತೆಗಳ ಊರು. ಈ ಊರಿನ ಇತಿಹಾಸಕ್ಕೆ ಕಾರ್ಮಿಕ ಪ್ರಜ್ಞೆಯ ಜೀವ ಸಂವೇದನೆಗಳಿವೆ. ಅಜಮಾಸು ಅರ್ಧಶತಮಾನಕ್ಕು ಅಧಿಕವೆನ್ನಬಹುದಾದ ಆರೇಳು ದಶಕಗಳ ಹಿಂದಿನ ಗಟ್ಟಿ ಹೋರಾಟದ ಐತಿಹಾಸಿಕ ನೆಲೆಗಟ್ಟಿನ ದಿನಮಾನಗಳವು. ಹತ್ತಾರು ಹತ್ತಿಗಿರಣಿಗಳು, ಸಣ್ಣಪುಟ್ಟ ಇತರೆ ಹತ್ತಾರು ಕಾರ್ಖಾನೆಗಳ ಊರು. ಹಳೇ ಡಾವಣಗೇರಿಯ ಮನೆ ಮನೆಗಳಲ್ಲೂ ಹತ್ತಿಗಿರಣಿಗಳಿಗೆ ಬೇಕಾಗುವ ನೂಲುಲಡಿ ತಯಾರಿಕೆಯ ಹೋಮ್ ಇಂಡಸ್ಟ್ರೀಸ್. ಹತ್ತಿಬಟ್ಟೆ ಗಿರಣಿ ಸಮುಚ್ಛಯಗಳಿಂದಾಗಿಯೇ ಈ ಊರು ಕರ್ನಾಟಕದ ಮ್ಯಾಂಚೆಸ್ಟರ್‌ ಎಂಬ ಹೆಸರಿನ ಕೀರ್ತಿಗೆ ಭಾಜನವಾದ ಊರು. ಹತ್ತಾರು ಸಾವಿರ ಕೂಲಿ ಕಾರ್ಮಿಕರ ಊರು. ದುಡಿಯುವ ವರ್ಗದ ಬೆವರಿನ ಶ್ರಮದಿಂದಾಗಿಯೇ ಅಂತಾರಾಷ್ಟ್ರೀಯ ಮಟ್ಟದವರೆಗೂ ಡಿಸಿಎಂ, ಕಾಟನ್ ಮಿಲ್ ಬಟ್ಟೆಯ ಖ್ಯಾತಿ ಹಬ್ಬಿತ್ತು. ಅದಕ್ಕೆಲ್ಲ ಲಿಂಗ ತಾರತಮ್ಯ ಇಲ್ಲದೇ, ಹಗಲು ರಾತ್ರಿ ಎನ್ನದೇ ಹೆಣ್ಣು ಗಂಡುಗಳು ಈ ಗಿರಣಿಗಳಲ್ಲಿ ಅಡ್ಡ ದುಡ್ಡಿಗೆ ಯಂತ್ರಗಳಂತೆ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಅವರ ದುಡಿತದ ಫಾಯದೆಯನ್ನು ಖಾಸಗಿ ಮಾಲೀಕರು ಯಥೇಚ್ಛವಾಗಿ ಪಡೆಯುತ್ತಿದ್ದರು. ಕೂಲಿ ಕಾರ್ಮಿಕರನ್ನು ಹತ್ತಾರು ತಾಸುಗಳ ಕಾಲ ಕಡಿಮೆ ಕೂಲಿಗೆ ದುಡಿಸಿಕೊಳ್ಳುತ್ತಿದ್ದ ಊಳಿಗಮಾನ್ಯದ ಕಾಲಮಾನಗಳವು. ವಿಶೇಷವಾಗಿ ಹೆಣ್ಣುಮಕ್ಕಳು, ಬಸುರಿ – ಬಾಣಂತಿಯರು ರಾತ್ರಿ ಪಾಳಿಯಲ್ಲಿ ಹಬ್ಬ ಹರಿದಿನಗಳೆನ್ನದೇ ದುಡಿಯಲೇಬೇಕಿದ್ದ ಕಠೋರದ ದುರ್ದಿನಗಳವು. ಕೂಲಿ ಕಾರ್ಮಿಕರ ನೋವು, ಸಂಕಟ ಮುಗಿಲು ಮುಟ್ಟಿದ ಬರ್ಬರ ಸಂದರ್ಭಗಳು. ಹೀಗೆ ದುಡಿದುಣ್ಣುವ ಕಾಯಕ ಜೀವಗಳು ಕೆಂಬಾವುಟದಡಿ ಒಗ್ಗೂಡಿದರು. ಪಂಪಾಪತಿ ಮುಂದಾಳತ್ವದಲ್ಲಿ ಸೆಕೆಂಡ್ ಲೈನ್ ಕೆಡರ್ಸ್ ತಯಾರಾದರು. ಅದರಲ್ಲಿ ಎಂ. ಜಿ. ಟಿ. ಅಗ್ರಪಂಕ್ತಿ ನಾಯಕರು. ನಗುಮೊಗದ ಅವರ ಸ್ನೇಹಶೀಲ ತಿತೀಕ್ಷೆಯೆದುರು ಎಲ್ಲ ಅಹಮಿಕೆಗಳು ಕುಬ್ಜಗೊಳ್ಳುತ್ತಿದ್ದವು. ಮುತ್ತಾತನ ಕಾಲದಲ್ಲೇ ಅಂದಿನ ಬಿಜಾಪುರ ಜಿಲ್ಲೆಯಿಂದ ಡಾವಣಗೇರಿಯೆಂಬ ವಾಣಿಜ್ಯ ನಗರಿಗೆ ಗುಳೇ ಬಂದ ಮಮದಾಪುರ ಗುರುಸಿದ್ದಪ್ಪ ತಿಪ್ಪೇಸ್ವಾಮಿ, ಎಂ. ಜಿ. ಟಿ. ಎಂತಲೇ ಖ್ಯಾತನಾಮರಾದವರು. ಡಾವಣಗೇರಿ ನಗರ ಕಟ್ಟುವಲ್ಲಿ ಎಂ. ಜಿ. ಟಿ. ಸೇರಿದಂತೆ ಉತ್ತರ ಕರ್ನಾಟಕದ ಎರೆಸೀಮೆ ಜನರ ಶ್ರಮದ ಬೃಹತ್ ಪಾಲಿದೆ. ದಾವಣಗೆರೆಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಗಟ್ಟಿಗೊಳ್ಳಲು ಇವರ ಪಾತ್ರ ಉಲ್ಲೇಖನೀಯ. ಎಂ. ಜಿ. ಟಿ., ದಾವಣಗೆರೆ ನಗರಸಭಾಧ್ಯಕ್ಷರಾಗಿ ಪಂಪಾಪತಿಯವರು ಹಾಕಿಕೊಟ್ಟ ಜನಪರ ಮತ್ತು ಆದರ್ಶ ಕೆಲಸಗಳನ್ನು ಮುಂದುವರೆಸಿದರು. ಜಗಳೂರು ರಸ್ತೆಯಲ್ಲಿ ನಿರ್ಮಾಣಗೊಂಡ ಬಸ್ ನಿಲ್ದಾಣ ಇವರ ಕನಸಿನ ಕೂಸು. ಬದಲಾದ ರಾಜಕೀಯದ ವಿಪ್ಲವಗಳಲ್ಲಿ ಎಂ. ಜಿ. ಟಿ. ಪಕ್ಷದಿಂದ ದೂರ ಸರಿದು ಜೆ.ಡಿ.ಯು. ಸೇರಿಕೊಂಡರು. ಸಾವಿನ ಕೊನೆಯ ದಿನಗಳಲ್ಲಿ ಅವರು ಯಾವುದೇ ರಾಜಕೀಯ ಪಕ್ಷದ ಸಕ್ರಿಯ ರಾಜಕಾರಣ ಬದುಕಿರಲಿಲ್ಲ. ಆದರೊಂದು ಮಾತು ಮಾತ್ರ ಖರೇವಂದ್ರ., ಅವರೊಳಗೊಬ್ಬ ಕ್ರಿಯಾಶೀಲ ಕಮ್ಯುನಿಸ್ಟ್ ಮೂಲದ ಎಕ್ಟಿವಿಸ್ಟ್ ಸದಾ ಜೀವಂತವಾಗಿರುತ್ತಿದ್ದನೆಂಬುದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿರಲಿಲ್ಲ. ಕೃಷ್ಣವರ್ಣದ ತಿಪ್ಪೇಸ್ವಾಮಿಯವರದು ಸರಳ ಉಡುಗೆ. ದೊಗಳೆ ಪ್ಯಾಂಟ್, ಅರ್ಧ ತೋಳಿನ ಅಂಗಿ. ಸದಾ ಲವಲವಿಕೆಯಿಂದ ಗಟ್ಟಿ ಮತ್ತು ಸ್ಪಷ್ಟ ದನಿಯಲ್ಲೆ ಮಾತಾಡುತ್ತಿದ್ದ ಅವರು ಭಾಷಣ ಮಾಡುತ್ತಿದ್ದರೆ ಸಿರಿವಂತ ಫ್ಯೂಡಲ್ ಗಳ ವಿರುದ್ದ ಸೆಡ್ಡು ಹೊಡೆದಂತೆ ಗುಡುಗುತ್ತಿದ್ದರು. ದಾವಣಗೆರೆಯಲ್ಲಿ ಕೆಂಪಂಗಿ, ಕೆಂಬಾವುಟಗಳ ಕ್ರಾಂತಿಯಹವಾ ಕಮರಿ ಹೋಗಿ ಒಂದೆರಡು ದಶಕಗಳೇ ಉರುಳುತ್ತಿರುವಾಗ ಎಂ. ಜಿ. ಟಿ. ಯಂತಹ ಕಪ್ಪುಗುಲಾಬಿಯ ಸಾವಿನೊಂದಿಗೆ ಸಮತಾವಾದದ ಪ್ರಬಲ ಶಕ್ತಿಯನ್ನು ಕಳಕೊಂಡ ಕೊರತೆ ಬಹುಪಾಲು ಪ್ರಗತಿಪರರನ್ನು ಕಾಡುತ್ತಲಿದೆ. ಹೋಗಿಬನ್ನಿ ಕಾಮ್ರೆಡ್ ನಮಸ್ಕಾರ. ಕಪ್ಪು ಗುಲಾಬಿಯ ಕೆಂಪು ನೆನಹುಗಳು. *******************************

ನೆನಪು Read Post »

ಇತರೆ

ವಿಜ್ಞಾನ

ವಿಜ್ಞಾನದ ಕ್ಷಿತಿಜ, ಮನುಕುಲದ ಪ್ರಗತಿ ವಿಸ್ತರಿಸುವ ಮೈಕ್ರೊವೈಟಾ         ವಿಶೇಷವಾದ ಜ್ಞಾನವೇ ವಿಜ್ಞಾನ.  ಹೊಸ ಸಂಶೋಧನೆಗಳು, ಹೊಸ ಆವಿಷ್ಕಾರಗಳಿಗೆ  ಮೂಲ ಕಾರಣ, ಕನಸನ್ನು ಕಾಣುವ  ಮತ್ತು ಅದನ್ನು  ನನಸಾಗಿಸುವ  ತೀವ್ರ ತುಡಿತ ಜೊತೆಗೆ ನಿರಂತರ  ಪ್ರಯತ್ನ. ಹಕ್ಕಿಗಳಂತೆ ತಾನು ಆಕಾಶದಲ್ಲಿ  ವಿಹರಿಸಬೇಕೆಂಬ ಕನಸನ್ನು ಕಂಡು ನನಸಾಗಿಸಿದವರಿಂದಾಗಿ ಇಂದು ವಾಯುಯಾನ ಸಾಧ್ಯವಾಗಿದೆ. ಸ್ಥೂಲ  ಜಗತ್ತೇ ಸರ್ವಸ್ವ ಎಂದುಕೊಂಡಲ್ಲಿಂದ  ನ್ಯಾನೋ ತಂತ್ರಜ್ಞಾನದ ಬಳಕೆಯ  ದಿನಗಳು ಬಂದಿವೆ. ಇಡೀ ವಿಶ್ವವು  ತರಂಗರೂಪಿ ಅಸ್ತಿತ್ವವೆಂಬ ಅರಿವಿನಿಂದಾಗಿ, ವಿಜ್ಞಾನದ  ಮೂಲ ನಂಬಿಕೆಗಳೂ ಬದಲಾಗುತ್ತಿವೆ. ಪ್ರೋಟೋನ್, ಪಾಸಿಟ್ರಾನ್‍ಗಳಿಗಿಂತ ಸೂಕ್ಷ್ಮಾತಿ ಸೂಕ್ಷ್ಮ ಜೀವಕಣಗಳಾದ ಮೈಕ್ರೊವೈಟಾ ಕುರಿತಾದ  ಸಿದ್ಧಾಂತದಿಂದಾಗಿ ವೈಜ್ಞಾನಿಕ  ಕ್ಷೇತ್ರದಲ್ಲಿ  ಮಹತ್ತರ ಬದಲಾವಣೆಗಳಾಗಲಿವೆ.    ಮೈಕ್ರೊವೈಟಾ ಸಿದ್ಧಾಂತದ ಹಿನ್ನೆಲೆಯಲ್ಲಿ ಸಂಶೋಧನೆಗಳು ಪ್ರಾರಂಭವಾಗುತ್ತಿವೆ.  ಮೈಕ್ರೊವೈಟಾಗಳು ಸ್ಥೂಲ, ಸೂಕ್ಷ್ಮ ಮತ್ತು ಸೂಕ್ಷ್ಮಾತಿ ಸೂಕ್ಷ್ಮ ರೂಪದಲ್ಲಿರುವುದರಿಂದ   ಭೌತಿಕ  ಪ್ರಯೋಗಾಲಯಗಳಲ್ಲೇ ಈ ಸಂಶೋಧನೆಗಳು ಪೂರ್ಣಗೊಳ್ಳಲಾರವು. ಈ ಸೂಕ್ಷ್ಮ ಸ್ಥಿತಿಯನ್ನು ಗ್ರಹಿಸಲು ಅವರವರ  ಕ್ಷೇತ್ರಗಳಲ್ಲಿ  ಪರಿಣ ತಿ ಹೊಂದಿದ ವಿಜ್ಞಾನಿಗಳಿಗೆ ಅಗ್ರಬುದ್ಧಿಯನ್ನು  ಬೆಳೆಸಿಕೊಳ್ಳುವುದು ಅನಿವಾರ್ಯ.  ಸಂಶೋಧಕರ ಮನಸ್ಸು ವಿಸ್ತಾರ ಹೊಂದಿದಷ್ಟು, ಸೂಕ್ಷ್ಮವಾದಷ್ಟು  ಅವರ ಕಲ್ಪನಾ ಶಕ್ತಿ  ಮತ್ತು ಗ್ರಹಿಕಾ ಸಾಮಥ್ರ್ಯ ಹೆಚ್ಚಾಗುತ್ತದೆ. ಇದಕ್ಕಿರುವ  ಒಂದೇ ದಾರಿಯೆಂದರೆ ಮನಸ್ಸನ್ನು ಏಕಾಗ್ರಗೊಳಿಸಿ, ಅನಂತತೆಯಲ್ಲಿ  ಒಂದಾಗಿಸುವ  ಧ್ಯಾನ ಮಾಡುವುದು.     ಕೋಟಿಗಟ್ಟಲೆ ಮೈಕ್ರೊವೈಟಾಗಳಿಂದ  ಒಂದು ಎಲೆಕ್ಟ್ರಾನ್ ರೂಪುಗೊಳ್ಳುತ್ತದೆಂಬ  ಆಧಾರದಲ್ಲಿ ನಡೆಸುವ  ಸಂಶೋಧನೆಗಳಿಂದಾಗಿ ಇಂದಿನ ಭೌತಶಾಸ್ತ್ರದ  ಅರಿವು ಹಿಗ್ಗಲಿದೆ. ಅಣು  ಶಕ್ತಿಯನ್ನು ಬಳಸಿ ಹಾರಲಿರುವ  ರಾಕೆಟ್‍ಗಳು ಕೂಡಾ  ಸೌರಮಂಡಲದಾಚೆಗೆ  ಹೋಗಲಾಗಿಲ್ಲ.  ಸಂಶೋಧನೆಗಳಿಂದ  ಹೊಸ ಇಂಧನಗಳ  ಸೃಷ್ಟಿಯಾಗಲಿದೆ.  ಪೆಟ್ರೋಲ್ , ಡೀಸೆಲ್‍ಗಳಿಗೆ  ಪರ್ಯಾಯಗಳು,  ಕೃತಕ  ಪೆಟ್ರೋಲ್ ಸೃಷ್ಟಿಯಾಗಲಿವೆ.  ಸೌರಮಂಡಲದಾಚೆಗಿನ ನಕ್ಷತ್ರ, ಗ್ರಹಗಳಿಗೆ  ತಲ್ಪುವ  ಮಾನವನ ಕನಸು ನನಸಾಗುತ್ತದೆ.    ಶತಮಾನಗಳಿಂದಲೂ  ಉತ್ತರ ಕಂಡುಕೊಳ್ಳಲಾಗದ ಅದೆಷ್ಟೋ    ನಿಸರ್ಗದ   ವೈಚಿತ್ರ್ಯಗಳಿಗೆ ವಿವರಣೆ ಸಿಗಲಿದೆ.  ಉದಾಹರಣೆಗಾಗಿ ಪ್ರಪಂಚದ  ಎಲ್ಲಾ ಸಮುದ್ರಗಳೂ ಒಂದಕ್ಕೊಂದು ಬೆಸೆದುಕೊಂಡಿವೆ.   ಆದರೂ, ಅವುಗಳ ಉಷ್ಣತೆ,  ಕ್ಷಾರೀಯತೆಗಳಲ್ಲಿ  ವ್ಯತ್ಯಾಸವಿದೆ.   ಆದರೆ ಈ ಸಮುದ್ರಗಳ ನೀರನ್ನು ತಂದು ಒಂದೇ ಪಾತ್ರೆಯಲ್ಲಿ  ಬೆರೆಸಿದಾಗ ಅವು ಒಂದಾಗಿ  ಏಕವಾಗುತ್ತವೆ. ಇದಕ್ಕೆ  ಅವುಗಳಲ್ಲಿರಬಹುದಾದ ಮೈಕ್ರೊವೈಟಾಗಳ  ಸಂಖ್ಯೆ  ಅಥವಾ ಪ್ರಭೇದಗಳು ಕಾರಣವಿರಬಹುದೇ? ಬರ್ಮೋಡಾ ತ್ರಿಕೋನದ ರಹಸ್ಯ ಇತ್ಯಾದಿಯಾಗಿ ಎಷ್ಟೋ ನಿಗೂಢತೆಗಳ  ರಹಸ್ಯ ಬಯಲಾಗಲಿವೆ.        ಅಣು ವಿಕಿರಣ ಯಾಕಾಗುತ್ತದೆ? ಅದನ್ನು  ತಡೆಯಲು ಸಾಧ್ಯವೇ? ಅಥವಾ ಕಿರಣ ಹೊರಸೂಸದೇ ಹೀರಿಕೊಳ್ಳಲ್ಪಡುವಂತೆ (ಪರಾವರ್ತನ) ಮಾಡಬಹುದೇ ಎಂಬುದರ ಸಾಧ್ಯತೆಗಳಿಗೆ  ಮೈಕ್ರೊವೈಟಾ  ಸಂಶೋಧನೆಯೇ ಉತ್ತರ ನೀಡಬಲ್ಲದು.  ವಿದ್ಯುತ್  ಸಂಪರ್ಕಕ್ಕಾಗಿ ಎಲ್ಲೆಡೆ  ತಂತಿ  ಎಳೆಯುವ ಬದಲಿಗೆ  ಪರ್ಯಾಯ ವಿಧಾನಗಳ ಸಾಧ್ಯತೆಯನ್ನು  ಮೈಕ್ರೊವೈಟಾ ಅಧ್ಯಯನ ತೋರಿಸಿಕೊಡಲಿದೆ.    ರಸಾಯನಶಾಸ್ತ್ರದ  ಸೂತ್ರಗಳು ಇನ್ನಷ್ಟು ಉದ್ದವಾಗಲಿದೆ. ಉದಾಹರಣೆಗಾಗಿ  ಕೃಷಿಕರು ಬಳಸುವ  ತುತ್ತ ಅಥವಾ ಕಾಪರ್ ಸಲ್ಫೇಟ್ ಇದರ ಸಂಕೇತ ಅuSಔ4.  ಎಲ್ಲಾ ತಯಾರಕರು ಪೂರೈಸುವ  ತುತ್ತದ ಪರಿಣಾಮ ಮಾತ್ರ  ಒಂದೇ ರೀತಿಯಾಗಿರುವುದಿಲ್ಲ.  ಎಲ್ಲೊ ಒಂದೆಡೆ ಪರಿಣಾಮಕಾರಿಯಾದ   ತುತ್ತ, ಇನ್ನೊಂದೆಡೆ  ಪರಿಣಾಮ ಬೀರುವುದಿಲ್ಲ.  ಇದಕ್ಕೆ ಕಾರಣ ಅವುಗಳಲ್ಲಿರುವ  ಮೈಕ್ರೊವೈಟಾಗಳ  ಪ್ರಭೇದ ಮತ್ತು ಸಂಖ್ಯೆ.  ಇದರ ಅಧ್ಯಯನ ಸಾಧ್ಯವಾದಾಗ   ತುತ್ತದ ರಾಸಾಯನಿಕ  ಸೂತ್ರ  ಇನ್ನಷ್ಟು ಉದ್ದವಾಗಿ   ಅuSಔ4-ಒಂ 20 ಲಕ್ಷ ಎಂದಾಗಬಹುದು. ಅಂದರೆ ಈ ತುತ್ತದಲ್ಲಿ    ಂ ಪ್ರಭೇದದ 20 ಲಕ್ಷ ಮೈಕ್ರೊವೈಟಾಗಳು ಇವೆ ಎಂದು ಅರ್ಥ.  ಒಂದಕ್ಕಿಂತ ಹೆಚ್ಚು ಪ್ರಭೇದಗಳಿರುವಾಗ ಅದನ್ನು  ಕೂಡಾ  ನಮೂದಿಸಬೇಕಾಗುತ್ತದೆ. ಈ ಸಂಶೋಧನೆಗಳಿಂದಾಗಿ  ರಾಸಾಯನಿಕಗಳ ಬಳಕೆಯಲ್ಲಿ  ನಿಖರತೆ  ಬರುತ್ತದೆ.   ರಸಾಯನಶಾಸ್ತ್ರದಲ್ಲಾಗುವ  ಸಂಶೋಧನೆಗಳ ಪರಿಣಾಮ ಇತರ ಸಂಬಂಧಿತ  ಕ್ಷೇತ್ರಗಳಾದ ಔಷಧಗಳು  (ಮಾನವ, ಪಶು, ಗಿಡ- ಮರಗಳಿಗೆ), ರಾಸಾಯನಿಕ  ಗೊಬ್ಬರಗಳು, ಇಂಧನ ಮೂಲ ಮುಂತಾದವುಗಳಲ್ಲಿ ಮಹತ್ತರ  ಬದಲಾವಣೆಗಳಾಗಲಿವೆ.     ಇಂಗಾಲದ  ಕಣಗಳಿಂದಲೇ ಜೀವೋದ್ಭವವಾಗಿದೆಯೆಂಬ ನಂಬಿಕೆಯ  ಆಧಾರದಲ್ಲೇ ಜೀವಶಾಸ್ತ್ರದ  ಸಂಶೋಧನೆಗಳು ನಡೆದಿವೆ.  ಪ್ರತಿಯೊಂದು ಕಾರ್ಬನ್  ಕಣವೂ ಕೋಟ್ಯಾಂತರ ಮೈಕ್ರೊವೈಟಾಗಳಿಂದ  ರೂಪುಗೊಳ್ಳುತ್ತದೆ.  ಮೈಕ್ರೊವೈಟಮ್  ಎನ್ನುವ ಸೂಕ್ಷ್ಮಾತಿ ಸೂಕ್ಷ್ಮ ಜೀವ ಬೀಜವೇ ಪ್ರಥ್ವಿಯ ಮೇಲೆ ಜೀವೋದ್ಭವಕ್ಕೆ ಕಾರಣ ಎಂಬ ಸಿದ್ಧಾಂತದನ್ವಯ ನಡೆಯುವ ಸಂಶೋಧನೆಗಳ ಪರಿಣಾಮವಾಗಿ ಜೀವಶಾಸ್ತ್ರದ ಇಂದಿನ ಜ್ಞಾನದ  ವಿಸ್ತಾರ ಅಗಾಧವಾಗಲಿದೆ.   ಇಷ್ಟೊಂದು  ವಿಧದ  ಸಸ್ಯ ಮತ್ತು ಪ್ರಾಣ  ಪ್ರಭೇದಗಳು ಯಾಕಿವೆ? ಅವಕ್ಕೆ  ಕಾರಣಗಳೇನು? ಅವುಗಳ ನಡುವಿನ  ಸಂಬಂಧಗಳೇನು ಮುಂತಾದ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ.  ವಂಶವಾಹಿನಿಯಾಗಿ ವ್ಯಕ್ತಿಯ ವಿಶಿಷ್ಟತೆಯನ್ನು  ನಿರ್ಧರಿಸುವ  ಆರ್‍ಎನ್‍ಎ, ಡಿಎನ್‍ಎಗಳು  ಹೇಗೆ  ರೂಪುಗೊಳ್ಳುತ್ತವೆ?ವಿವಿಧ ರೀತಿಯ  ರಕ್ತದ ಗುಂಪುಗಳಿರಲು ಕಾರಣವೇನು ಮುಂತಾದ  ರಹಸ್ಯಗಳು   ಬಯಲಾಗಲಿವೆ.       ಧಾನ್ಯ, ಹಣ್ಣು, ಹಂಪಲು, ತರಕಾರಿಗಳ  ವಂಶೀಯ ಗುಣಗಳನ್ನು ಗುರ್ತಿಸಿ,  ಅವುಗಳ  ಮೈಕ್ರೊವೈಟಾ ಸಂಖ್ಯೆ ಮತ್ತು ಸ್ವರೂಪವನ್ನು  ಬದಲಿಸುವುದರೊಂದಿಗೆ  ಪೌಷ್ಠಿಕಾಂಶಗಳ ಪ್ರಮಾಣವನ್ನು ನಿಗದಿಗೊಳಿಸಲು ಸಾಧ್ಯವಾಗಲಿದೆ ಹಾಗೂ  ಪೇರಲೆಯನ್ನು  ಮಾವಿನಹಣ್ಣನ್ನಾಗಿ  ಪರಿವರ್ತಿಸಲು ಸಾಧ್ಯವಾಗಲಿದೆ.         ಜೀವಶಾಸ್ತ್ರದ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದರಿಂದ ಆರೋಗ್ಯ ಕ್ಷೇತ್ರದ ಬಲ ವರ್ಧಿಸಲಿದೆ. ವಿವಿಧ ಔಷಧಿಗಳ ಪರಿಣಾಮದ ನಿಖರತೆಯನ್ನು, ಅದರಲ್ಲೂ ಹೋಮಿಯೋಪಥಿ ಚಿಕಿತ್ಸಾ ವಿಧಾನಕ್ಕೆ ಬಹಳಷ್ಟು ಹೊಸ ಆಯಾಮಗಳು ಸೇರ್ಪಡೆಯಾಗಲಿದೆ. ವಿಷ ಚಿಕಿತ್ಸಾ ವಿಧಾನವೆಂಬುದು ಪ್ರಾಚೀನ  ಭಾರತದಲ್ಲಿ  ಪ್ರಚಲಿತವಿದ್ದರೂ, ಕಾರಣಾಂತರಗಳಿಂದ ಹಿನ್ನೆಲೆಗೆ ಸರಿದಿದ್ದರಿಂದಾಗಿ, ಅದೇ ತತ್ವ ಆಧಾರಿತ ಹೋಮಿಯೋಪಥಿಯ ಮೂಲವನ್ನು ಪಾಶ್ಚಾತ್ಯ ದೇಶಗಳಿಗೆ  ತಪ್ಪಾಗಿ ನೀಡಲಾಗುತ್ತಿದೆ.    ಮೈಕ್ರೊವೈಟಾ ಸಂಶೋಧನೆಗಳು  ಇಡೀ ಜಗತ್ತಿನ  ಆರ್ಥಿಕ ಕ್ಷೇತ್ರದ ಮೇಲೆ  ಮಹತ್ತರ ಪರಿಣಾಮ  ಬೀರಲಿವೆÉ.  ಆಯಾತ, ನಿರ್ಯಾತವಾಗುವ  ವಸ್ತುಗಳು ಮತ್ತು  ಅವುಗಳ  ಸ್ವರೂಪ ಬದಲಾಗಲಿದೆ. ಉದಾಹರಣೆಗಾಗಿ ತೈಲಕ್ಕೆ  ಪರ್ಯಾಯ  ವಸ್ತುವನ್ನು ಸಿದ್ಧಪಡಿಸಿದಾಗ ತೈಲ ಉತ್ಪಾದಕ ರಾಷ್ಟ್ರಗಳ  ಮೇಲಿನ ಅವಲಂಬನೆ  ತಗ್ಗಲಿದೆ.   ಪೊಟ್ಯಾಶ್ ಮತ್ತು ರಂಜಕ ಒದಗಿಸುವ  ರಾಸಾಯನಿಕ  ಗೊಬ್ಬರಗಳ ತುಟಾಗ್ರತೆ  ಭಾರತವನ್ನು  ಕಾಡುತ್ತಿದ್ದು,  ಬೇರೆ  ದೇಶಗಳಿಂದ ಆಮದು ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಪೊಟ್ಯಾಶ್ ಪ್ರಮಾಣವನ್ನು  ಹೆಚ್ಚಿಸುವ  ಸಂಶೋಧನೆಗಳಿಂದಾಗಿ, ಸ್ಥಳೀಯವಾಗಿ ಲಭ್ಯವಿರುವ  ಸಂಪನ್ಮೂಲಗಳನ್ನೇ ಬಳಸಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಲಿದೆ.         ಸಂಪನ್ಮೂಗಳು ಎಂದರೆ ಇಂದಿನ ಸ್ಥಿತಿಯಲ್ಲಿ  ಭೌತಿಕ  ಸಂಪನ್ಮೂಲಗಳೆಂದು  ಅರ್ಥೈಸಲಾಗುತ್ತದೆ. ಮಾನವ  ಸಂಪನ್ಮೂಲದ  ಕುರಿತು  ಹೇಳುವಾಗ ಮಾನವನ  ಬುದ್ಧಿಶಕ್ತಿಯನ್ನು ಪರಿಗಣ ಸಲಾಗುತ್ತದೆ. ಇದರಾಚೆಗಿನ  ಸಂಪನ್ಮೂಲಗಳ  ಪರಿಚಯವನ್ನು ಮೈಕ್ರೊವೈಟಾ ಸಿದ್ಧಾಂತ ನೀಡಲಿದೆ.   ಭೌತಿಕ, ಅಭೌತಿಕ, ಮಾನಸಿಕ,  ಆಧ್ಯಾತ್ಮಿಕ ಸಂಪನ್ಮೂಲಗಳ  ಕಲ್ಪನೆ, ವೈಯಕ್ತಿಕ  ಮತ್ತು ಸಾಮೂಹಿಕ ಸ್ತರದಲ್ಲಿ  ಲಭ್ಯವಿರುವ  ಈ ಸಂಪನ್ಮೂಲಗಳನ್ನು  ಸಾಮೂಹಿಕ ಹಿತಕ್ಕಾಗಿ  ಬಳಸುವ  ವಿಧಾನಗಳು ರೂಪುಗೊಳ್ಳಲಿವೆ.         ಅತಿಸೂಕ್ಷ್ಮ ಅಸ್ತಿತ್ವದ ವಿಶ್ವದ  ಜೈವ  ಬೀಜ, ವಿಶ್ವ ಚೈತನ್ಯದ  ನಿಗೂಢ ಉತ್ಪತ್ತಿಯನ್ನು  ಮೈಕ್ರೊವೈಟಮ್  (ಬಹುವಚನದಲ್ಲಿ ಮೈಕ್ರೊವೈಟಾ)  ಎಂದು  ಪರಿಚಯಿಸಿದ  ದಾರ್ಶನಿಕ  ಶ್ರೀ ಪ್ರಭಾತರಂಜನ್  ಸರ್ಕಾರರು ನೀಡಿರುವ  ಆರ್ಥಿಕ ಸಿದ್ಧಾಂತವಾದ  ಪ್ರಗತಿಶೀಲ  ಉಪಯೋಗ ತತ್ವದಲ್ಲಿ  ( ಸಂಕ್ಷಿಪ್ತದಲ್ಲಿ ಪ್ರಉತ)  ಸಂಪನ್ಮೂಲಗಳ  ಗುರುತಿಸುವಿಕೆ ಮತ್ತು ಬಳಸುವಿಕೆಯ ವಿಧಾನವನ್ನು ಮೇಲಿನಂತೆ  ವಿವರಿಸಲಾಗಿದೆ.     ಮೈಕ್ರೊವೈಟಾಗಳ  ಪರಿಣಾಮವನ್ನು ಆಧರಿಸಿ ಅವುಗಳನ್ನು  ನಕಾರಾತ್ಮಕ, ಸಕಾರಾತ್ಮಕ ಹಾಗೂ ತಟಸ್ಥ ಎಂದು ವರ್ಗೀಕರಿಸಲಾಗುತ್ತದೆ. ಜಗತ್ತನ್ನು ಕಾಡುತ್ತಿರುವ  ಹಲವು ವಿಧದ  ವೈರಸ್‍ಗಳು ನÀಕಾರಾತ್ಮಕ ಸ್ಥೂಲ  ಮೈಕ್ರೊವೈಟಾಗಳು. ಇವುಗಳ ಕುರಿತಾದ ಹೆಚ್ಚಿನ  ತಿಳುವಳಿಕೆ ಹಾಗೂ ನಿಯಂತ್ರಣದ ವಿಧಾನಗಳ ಅಳವಡಿಕೆಗೆ ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಔಷಧಿಗಳಿಂದ ನಕಾರಾತ್ಮಕ ಮೈಕ್ರೊವೈಟ್‍ಗಳನ್ನು  ಕೊಲ್ಲಲು ಸಾಧ್ಯವಿಲ್ಲ.  ಆದರೆ ಸಕಾರಾತ್ಮಕ ಮೈಕ್ರೊವೈಟಾಗಳ ಸಂಖ್ಯೆಯನ್ನು ಹೆಚ್ಚಿಸುವ  ಮೂಲಕ ಅವುಗಳ ನಿಯಂತ್ರಣ ಸಾಧ್ಯ.    ಆರ್ಥಿಕ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ  ಮೈಕ್ರೊವೈಟಾ ಕುರಿತಾಗಿ ನಡೆಯುವ  ಸಂಶೋಧನೆಗಳಿಂದಾಗಿ  ಇಡೀ ಮಾನವ ಸಮಾಜ  ಲಾಭ ಪಡೆಯಲಿದೆ.  ಇಂದಿನ ಪರಿಸ್ಥಿತಿಯಲ್ಲಿ ತನ್ನ ಭೌತಿಕ  ಅಸ್ತಿತ್ವವನ್ನು  ಕಾಪಾಡಿಕೊಳ್ಳುವುದೇ  ಮಾನವರಿಗೆ  ದೊಡ್ಡ ಸವಾಲಾಗಿದೆ.  ಆಹಾರ, ವಸ್ತ್ರ, ವಸತಿ, ಶಿಕ್ಷಣ, ಔಷದೋಪಚಾರಗಳ ಪೂರೈಕೆಗಾಗಿ ಜೀವನವಿಡೀ ಸೆಣಸುವುದೇ ಹಲವರ ಪಾಡಾಗಿದೆ. ಅಂದರೆ,  ವ್ಯಕ್ತಿಯ  ಸಾಮಥ್ರ್ಯದ ಹೆಚ್ಚಿನ  ಭಾಗ ಜೀವನದ  ಕನಿಷ್ಠ ಅಗತ್ಯತೆಗಳ ಪೂರೈಕೆಗಾಗಿಯೇ ವ್ಯಯವಾಗುತ್ತಿದೆ.  ಮುಂದಿನ ದಿನಗಳಲ್ಲಿ  ಇಡೀ ಮಾನವ ಸಮಾಜಕ್ಕೆ ಈ ಸಮಸ್ಯೆಯಿಂದ  ಬಿಡುಗಡೆ  ಸಿಗಲಿದೆ.  ಜೀವನದ  ಬಹುಪಾಲು ಸಮಯವನ್ನು  ತನ್ನ ಅಸ್ತಿತ್ವದ  ರಕ್ಷಣೆಗಾಗಿಯೇ  ಕಳೆಯಬೇಕಾದ  ಪರಿಸ್ಥಿತಿ   ಬದಲಾಗಿ ಸಾಕಷ್ಟು ಬಿಡುವು ಸಿಗಲಿದೆ.    ದಿನಕ್ಕೆ  10 ರಿಂದ  12 ತಾಸು  ದುಡಿದರೂ ಬದುಕು ಕಟ್ಟಿಕೊಳ್ಳಲಾಗದ  ಸ್ಥಿತಿಯಲ್ಲಿ  ಬದುಕುತ್ತಿರುವ  ನಮಗೆ ದಿನಕ್ಕೆ  ಎರಡು ಗಂಟೆಗಿಂತ ಕಡಿಮೆ ದುಡಿದರೂ ಉತ್ತಮ ಬದುಕು ಸಿಗುತ್ತದೆನ್ನುವುದನ್ನು ಊಹಿಸಲೂ ಇಂದು   ಕಷ್ಟವಾಗುತ್ತದೆ.  ಅಂತಹ ದಿನಗಳು ಬಂದಾಗ  ಏನಾಗಬಹುದು? ಸಮಯದ ಬಳಕೆ ಹೇಗಾದೀತು ಎಂಬ ಪ್ರಶ್ನೆ ಸಹಜ.    ಮಾನವನ ಅಸ್ತಿತ್ವವು ದೈಹಿಕ, ಮಾನಸಿಕ, ಆಧ್ಯಾತ್ಮಿಕ ಎಂಬ ಮೂರು ಸ್ತರಗಳಲ್ಲಿದೆ. ಇಂದಿನ ಪರಿಸ್ಥಿತಿಯಲ್ಲಿ ಹೆಚ್ಚಿನವರ  ಬದುಕು ದೈಹಿಕ  ಅಸ್ತಿತ್ವದಾಚೆಗೆ  ಹೋಗುವುದಿಲ್ಲ. ಕೆಲವರು ತಮ್ಮ ಮಾನಸಿಕ  ಅಸ್ತಿತ್ವವನ್ನು  ಬೆಳೆಸಿಕೊಳ್ಳುತ್ತಾರೆ. ತೀರಾ ಕ್ವಚಿತ್ತಾಗಿ  ಕೆಲವರು  ಆಧ್ಯಾತ್ಮಿಕ  ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿದೆ.  ಮಾನವರ ಮಾನಸಿಕ   ಸಾಮಥ್ರ್ಯದ ಶೇಕಡಾ 10 ರಷ್ಟನ್ನು ಕೂಡ ಹೆಚ್ಚಿನವರು ಬಳಸುತ್ತಿಲ್ಲವೆಂದು ಹೇಳಲಾಗುತ್ತದೆ. ಅಂದರೆ   ಉಳಿದ  ಶೇಕಡಾ 90 ರಷ್ಟು  ಮಾನವನ ಮಾನಸಿಕ  ಸಾಮಥ್ರ್ಯ  ಬಳಕೆಯಾಗದೇ ವ್ಯರ್ಥವಾಗುತ್ತಿದೆ.   ಬದಲಾಗಲಿರುವ  ಸಾಮಾಜಿಕ- ಆರ್ಥಿಕ ಪರಿಸ್ಥಿತಿಯಲ್ಲಿ ಮಾನವನ  ಮಾನಸಿಕ, ಆಧ್ಯಾತ್ಮಿಕ  ಪ್ರಗತಿಗೆ ಅನುಕೂಲಕರವಾದ ಸನ್ನಿವೇಶ ಸೃಷ್ಟಿಯಾಗಲಿದೆ. ಭೌತಿಕ  ಅಸ್ತಿತ್ವದ  ನಿರ್ವಹಣೆ ಸುಲಭವಾದಷ್ಟು ಹೆಚ್ಚುವರಿಯಾಗಿ ಸಿಗುವ  ಬಿಡುವಿನ ವೇಳೆಯನ್ನು  ಉನ್ನತ  ಉದ್ದೇಶಗಳಿಗೆ  ಬಳಸಿಕೊಳ್ಳುವುದನ್ನು ಪ್ರಕೃತಿ ಕಡ್ಡಾಯಗೊಳಿಸಲಿದೆ.  ಯಾಕೆಂದರೆ  ವಿಕಾಸ ಪಥದಲ್ಲಿ ಮಾನವನ ಸೃಷ್ಟಿಯಾಗಿಸುವುದೇ ವಿಕಾಸವನ್ನು ಮುಂದುವರಿಸುವ  ಉದ್ದೇಶದಿಂದ. ಅಪರಿಪೂರ್ಣತೆಯಿಂದ ಪರಿಪೂರ್ಣತೆಯೆಡೆಗಿನ  ಪಯಣವೇ  ಜೀವನವೆಂದು ಅನುಭಾವಿಗಳು ಹೇಳುತ್ತಾರೆ.  ಪರಿಪೂರ್ಣತೆಯನ್ನು ಸಾಧಿಸುವ  ದಾರಿಯಲ್ಲಿ  ಮಾನವ ಜೀವಿಯ  ಹಂತ  ಪ್ರಾಮುಖ್ಯವಾದದ್ದು. ಯಾಕೆಂದರೆ  ಸ್ವ ಪ್ರಯತ್ನದಿಂದ  ಪರಿಪೂರ್ಣತೆಯ  ದಾರಿಯಲ್ಲಿ  ಸಾಗುವ ಸಾಮಥ್ರ್ಯವನ್ನು  ಪ್ರಕೃತಿ ಮಾನವರಿಗೆ   ಮಾತ್ರ  ನೀಡಿದೆ.   ಸಕಾರಾತ್ಮಕ ಮೈಕ್ರೊವೈಟಾಗಳು ವಿಕಾಸದ ದಾರಿಯಲ್ಲಿ  ಚಲಿಸುವವರಿಗೆ  ಸಹಕಾರಿಯಾಗಲಿವೆÉ.  ಕೆಲವೇ ವ್ಯಕ್ತಿಗಳು ಆಧ್ಯಾತ್ಮದ  ( ವಿಕಾಸ) ಪಥದಲ್ಲಿ  ನಡೆದು ಗುರಿ ತಲುಪುವುದು ಪ್ರಕೃತಿಯ ಉದ್ದೇಶವಲ್ಲ. ಇಡೀ ಮಾನವ  ಕುಲ ಒಂದು ಸಮಾಜವಾಗಿ, ಒಗ್ಗಟ್ಟಿನಿಂದ  ವಿಕಾಸದ ಪಯಣ ಮುಂದುವರಿಸಲು ಪ್ರಕೃತಿ ಸದಾ ಸಹಾಯ ಮಾಡುತ್ತದೆ.     ಇದರ ಮೊದಲ ಹಂತವೆಂದರೆ, ಭೌತಿಕ  ಸ್ತರಕ್ಕೆ   ನೇರವಾಗಿ ಸಂಬಂಧಿಸಿದ  ಸಾಮಾಜಿಕ, ಆರ್ಥಿಕ ಕ್ಷೇತ್ರ, ಮಾನವನ ಸ್ವಾರ್ಥ-ಸಂಕುಚಿತತೆಗಳ ಆಧಾರದ ಮೇಲೆ ರೂಪುಗೊಂಡಿರುವ  ಇಂದಿನ  ಕ್ರೂರ ಬಂಡವಾಳವಾದ ನೀತಿಯ ಅಧಃಪತನ ಹಾಗೂ  ನಿರಾಕರಣೆ. ಒಂದು ಚಿಕ್ಕ ವೈರಾಣುವಿನ ಹೊಡೆತಕ್ಕೆ  ಇಡೀ ವಿಶ್ವದ ಆರ್ಥಿಕತೆ  ಏರುಪೇರಾಗಿದೆ.  ಹಲವು ದೇಶಗಳಲ್ಲಿ  ಆರ್ಥಿಕ ಹಿಂಜರಿತ ಪ್ರಾರಂಭವಾಗಿದ್ದು, ಭೀಕರ ಆರ್ಥಿಕ   ಕುಸಿತಕ್ಕೆ   ಕಾರಣವಾಗಲಿದೆ. ಯಾವ ದೇಶ ಆರ್ಥಿಕ ವಿಕೇಂದ್ರೀಕರಣ ನೀತಿ ಅರ್ಥಾತ್  ಜನಾಧಿಕಾರದ ವ್ಯವಸ್ಥೆಯನ್ನು  ಎಷ್ಟು ಬೇಗ  ಅಳವಡಿಸಿಕೊಳ್ಳುತ್ತದೋ ಅಷ್ಟು ಬೇಗ ಆರ್ಥಿಕ ಚೇತರಿಕೆ  ಕಾಣಲಿದೆ.   ಈ ಪೃಥ್ವಿ ಇರುವುದು ಕೇವಲ ಮಾನವರಿಗಾಗಿ ಮಾತ್ರವಲ್ಲ.  ಅವರಿಗಿಂತ ಮೊದಲಿನಿಂದಲೂ ಇಲ್ಲಿಯೇ ಇದ್ದ ಗಿಡ ಮರಗಳು, ಪಕ್ಷಿ, ಪ್ರಾಣ  ಸಂಕುಲಕ್ಕೂ ಅದು ಸೇರಿದೆ. ತನ್ನ ವೈಯಕ್ತಿಕ  ಹಾಗೂ ಸಾಮೂಹಿಕ ಬದುಕಿನ  ರೀತಿ- ನೀತಿಗಳನ್ನು, ಸಿದ್ಧಾಂತ – ಆಚರಣೆಗಳಲ್ಲಿ  ಪ್ರಕೃತಿ  ಪೂರಕ ನಿಲುವನ್ನು  ಅಳವಡಿಸಿಕೊಳ್ಳದಿದ್ದರೆ,  ನಿಸರ್ಗ ತನ್ನದೇ ರೀತಿಯಲ್ಲಿ  ಪಾಠ ಕಲಿಸುತ್ತದೆ.    ಸೃಷ್ಟಿಯ  ವೈಚಿತ್ರ್ಯವನ್ನು  ಅರಿಯಲು,  ಮನುಕುಲದ   ಉಳಿವಿಗಾಗಿ ಅದನ್ನು ಬಳಸಲು ಮೈಕ್ರೊವೈಟಾ ಸಿದ್ಧಾಂತ ಹೊಸ ಹೊಳಹುಗಳನ್ನು ನೀಡಿದೆ.  ಇದು ವಿಜ್ಞಾನದ ಇತಿಮಿತಿಗಳನ್ನು  ದಾಟಲು ಮಾತ್ರವಲ್ಲ, ಇಡೀ ಮಾನವ  ಸಮಾಜದ   ಪ್ರಗತಿಯ ವೇಗವನ್ನು  ಹೆಚ್ಚಿಸಲೂ ಸಹಕಾರಿ ಹಾಗೂ ಅನಿವಾರ್ಯ. (Microvita – ಕುರಿತಾದ ಹೆಚ್ಚಿನ ಮಾಹಿತಿ ಅಂತರ್ಜಾಲದಲ್ಲಿ ಲಭ್ಯ.) ******* ಗಣೇಶ್ ಭಟ್, ಶಿರಸಿ                  –

ವಿಜ್ಞಾನ Read Post »

ಇತರೆ

ಜಾನಪದ

ಗರ್ದಿ ಗಮ್ಮತ್ತು ಅಳಿದು ಹೋದ ಜಾನಪದ ಕಲೆ ನಮ್ಮ ಎಳೆಯ ಕಾಲದ ‘ಗರ್ದಿ ಗಮ್ಮತ್ತು’..! ವಿಧಾನಸೌಧ ನೋಡ… ಹೇಮಾ ಮಾಲಿನಿ ನೋಡ… ದುರ್ಗಪ್ಪನ; ‘ಗರ್ದಿ ಗಮ್ಮತ್ತು’ ನೋಡ..!! 1970 ಮತ್ತು 1980ರ ಆಸುಪಾಸಿನಲ್ಲಿ ಮನರಂಜನೆ ಎಂಬುದೇ ವಿರಳವಾಗಿತ್ತು. ಆಗ ಸಿನೆಮಾಗಳು ಹಾಗೂ ವರ್ಷಕ್ಕೊಮ್ಮೆ ಜರುಗುವ ಜಾತ್ರೆ, ಹಬ್ಬಹರಿದಿನಗಳು ಇವುಗಳೇ ಮನರಂಜನೆಯಾಗಿದ್ದವು… ಆ ಸಮಯದಲ್ಲಿ ಪ್ರತಿ ಜಾತ್ರೆಯಲ್ಲಿ ತಪ್ಪದೇ ಕಾಣುತ್ತಿದ್ದ ಒಂದು ವಿಶೇಷ ಅಂದರೆ ‘ಗರ್ದಿ ಗಮ್ಮತ್ತು’. ಮೊಬೈಲ್, ವಾಟ್ಸ್ ಅಪ್‌ನಲ್ಲಿ ಕಳೆದುಹೋದ ಇಂದಿನ ಬಹುತೇಕ ಮಕ್ಕಳಿಗೆ ‘ಗರ್ದಿ ಗಮ್ಮತ್ತು’ ಅಂದರೇನು ಎಂಬುದೇ ಗೊತ್ತಿಲ್ಲ. ಗರ್ದಿ ಗಮ್ಮತ್ತು ಎಂದರೆ, ಒಂದು ಡಬ್ಬಾದಂತಹ ಪೆಟ್ಟಿಗೆಯು ಫೋಟೊಗಳ ನೆಗಟಿವ್ ಗಳನ್ನು ಬಳಸಿಕಂಡು ಚಿಕ್ಕ ಕಿಂಡಿಯಿಂದ ಅಂದರೆ, ಒಂದೇ ಕಣ್ಣಿನಿಂದ ಇಣುಕಿ ನೋಡುವಷ್ಟು ಕಿಂಡಿಯಿಂದ 2 ರಿಂದ 3 ನಿಮಿಷಗಳ ಚಿತ್ರಗಳ ಸರಣಿಗಳನ್ನು ತೋರಿಸುವ ವೈವಿಧ್ಯಮಯ ಸಾಧನ… ಈ ಸಾಧನವನ್ನು ಹಿಡಿದುಕೊಂಡಿರುವ ವ್ಯಕ್ತಿಯು ಚಿಣ್ಣರಿಂದ ವೃದ್ಧರವರೆಗೆ ಎಲ್ಲರನ್ನೂ ಆಕರ್ಷಿಸುವ ಪರಿ ವಿಶಿಷ್ಟ. ಏನಿದೆ ಆ ಚಿಕ್ಕ ಡಬ್ಬಾದಲ್ಲಿ ಎಂದು ಕಿಂಡಿಯಲ್ಲಿ ಕಣ್ಣು ಹಾಯಿಸಿದೊಡನೆಯೇ ಆ ವ್ಯಕ್ತಿ ಒಂದು ಕಾಲಿಂಗ್ ಬೆಲ್ ತರಹ ಚಿಕ್ಕ ಘಂಟೆಯನ್ನು ಬಾರಿಸುತ್ತ, “ವಿಧಾನ ಸೌಧ ನೋಡ… ಹೇಮಾ ಮಾಲಿನಿ ನೋಡ… ಅಮಿತಾಭ ಬಚ್ಚನ್ ನೋಡ… ರಾಜಕುಮಾರ ನೋಡ…” ಎಂದು ಹಾಡುತ್ತಿದ್ದನು. ಆ ಹಾಡಿಗೂ ಆ ಡಬ್ಬಾದಲ್ಲಿ ಬರುವ ಚಿತ್ರಗಳಿಗೂ ಸರಿಹೊಂದುವಂತಹ ಪಕ್ಕಾ ಟೈಮಿಂಗ್ ಪ್ರಕಾರ ಮನರಂಜಿಸುವ ಪರಿ ಎಲ್ಲರಿಗೂ ಆಪ್ತ ಮತ್ತು ಇಷ್ಟವಾಗಿರುತ್ತಿತ್ತು… ಜಾಗತೀಕರಣ, ತಂತ್ರಜ್ಞಾನ ಕ್ಷೇತ್ರದ ಕ್ಷಿಪ್ರ ಬೆಳವಣಿಗೆ ಇಂದು ನಮಗೆಲ್ಲ ಹೊಸ ಜಗತ್ತನ್ನೇ ತೋರಿಸಿತು ನಿಜ. ಆದರೆ, ನಮ್ಮದೇ ಎನ್ನುವಂತಹ ನಮ್ಮಿಷ್ಟದ ಹಲವು ಪುರಾತನ ಸಾಂಪ್ರದಾಯಿಕ ಜಾನಪದ ವೈಶಿಷ್ಟ್ಯಗಳನ್ನು ರೂಢಿಗಳನ್ನು ಮತ್ತು ಮನರಂಜನಾ ವಿಧಾನಗಳನ್ನು ನಮಗರಿವಿಲ್ಲದೇ ದೂರ ಕರೆದುಕೊಂಡು ಹೋಯಿತು ಎನ್ನುವುದು ವಿಷಾದನೀಯ… ಅವುಗಳಲ್ಲಿ ‘ಗರ್ದಿ ಗಮ್ಮತ್ತು’ ಒಂದು. ಇಂದು 40ರ ವಯಸ್ಸಿನ ಮೇಲೆ ಇರುವ ಬಹುತೇಕ ಜನರು ‘ಗರ್ದಿ ಗಮ್ಮತ್ತ’ನ್ನು ತಮ್ಮೂರ ಜಾತ್ರೆಯಲ್ಲಿ ನೋಡಿಯೇ ನೋಡಿರುತ್ತಾರೆ. ಆದರೆ, ಇಂದಿನ ಕೆಲವು ಯುವಕರಿಗೆ ಹಾಗೂ ಹಲವು ಮಕ್ಕಳಿಗೆ ಇದರ ಬಗ್ಗೆ ಗೊತ್ತೇ ಇಲ್ಲದಂತಾಗಿದೆ… ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳ ಪ್ರತಿ ಜಾತ್ರೆಗಳಲ್ಲೂ ಕಂಡುಬರುತ್ತಿದ್ದ ‘ಗರ್ದಿ ಗಮ್ಮತ್ತು’ ಇಂದು ಮಾಯವಾಗಿದೆ. ಅಂಗೈನಲ್ಲಿರುವ ಮೊಬೈಲ್ ತೆಗೆದು ಆನ್‌ಲೈನ್‌ನಲ್ಲೇ ಬೇಕಾದ ಚಲನಚಿತ್ರಗಳನ್ನು ನೋಡುವ ಈಗಿನ ಜಮಾನಾದಲ್ಲಿ ‘ಗರ್ದಿಯ ಗಮ್ಮತ್ತು’ ಕಿಮ್ಮತ್ತಿಲ್ಲದೇ ಮೂಲೆಗುಂಪಾಗುತ್ತಿದೆ. ಡಬ್ಬಾ ಟಾಕೀಸ್‌ನಿಂದ ದಿನಕ್ಕೆ ಬೇಕಾದ ಕನಿಷ್ಠ ಗಳಿಕೇನೂ ಆಗಲ್ಲ ಎಂದು ಇದನ್ನು ಬಿಟ್ಟು ಬೇರೆ ಉದ್ಯೋಗ ಅರಸಿ ಹೋಗಿದ್ದಾರೆ. ಈ ಪೆಟ್ಟಿಗೆಗಳು ಎಷ್ಟೋ ಮನೆಗಳ ಮೂಲೆಯಲ್ಲಿ ಹಾಳಾಗುತ್ತಿವೆ ಹಾಗೂ ಇದರ ನೆನಪುಗಳ ಎಷ್ಟೋ ಮನಗಳ ಮೂಲೆಯಲ್ಲಿ ಹಳೆಯದನ್ನು ನೆನಯುತ್ತ ಮೆಲುಕು ಹಾಕುತ್ತ ಕುಳಿತಿವೆ… ‘ಗರ್ದಿ ಗಮ್ಮತ್ತ’ನ್ನು ಇಂದಿನ ಚಿಣ್ಣರಿಗೂ ಪರಿಚಯಿಸಬೇಕೆಂಬ ಇರಾದೆಯಿಂದ ಗದಗ ಜಿಲ್ಲೆಯ ಅಬ್ಬಿಗೇರಿ ಗ್ರಾಮದ ವೃದ್ಧರೊಬ್ಬರು ಇಂದಿಗೂ ಅದಮ್ಯ ಉತ್ಸಾಹದಿಂದ ಓಣಿ ಕೇರಿಗೆ ಭೇಟಿ ನೀಡುತ್ತಿದ್ದಾರೆ, :ಗರ್ದಿ ಗಮ್ಮತ್ತ’ನ್ನು ಪರಿಚಯಿಸುತ್ತಿದ್ದಾರೆ. ಅವರ ಹೆಸರು ದುರ್ಗಪ್ಪ ಅಂತ, ಇವರು ಕೊಪ್ಪಳದವರು. 65 ವರ್ಷದ ದುರ್ಗಪ್ಪ ಇಂದಿಗೂ ಹಳ್ಳಿ ಹಳ್ಳಿಗಳಿಗೆ ಹಾಗೂ ಪಟ್ಟಣಗಳಿಗೆ ತೆರಳಿ ‘ಗರ್ದಿ ಗಮ್ಮತ್ತ’ನ್ನು ಪರಿಚಯಿಸುತ್ತಿದ್ದಾರೆ. ಮೊದಲು ಗದಗ ಹತ್ತಿರದ ಅಬ್ಬಿಗೇರಿಯಲ್ಲಿ ವಾಸಿಸುತ್ತಿದ್ದ ಇವರು ಈಗ ರೋಣ ಪಟ್ಟಣದಲ್ಲಿ ವಾಸವಾಗಿದ್ದಾರೆ. ಇವರಿಗೆ ಇಬ್ಬರು ಮಕ್ಕಳು. ಇಬ್ಬರೂ ರೋಣದಲ್ಲಿ ಪ್ಲಾಸ್ಟಿಕ್ ಅಂಗಡಿ ಇಟ್ಟುಕೊಂಡಿರುವುದರಿಂದ ಇವರು ವಾಸಸ್ಥಳ ಬದಲಾಯಿತು. ರೋಣ ಪಟ್ಟಣಕ್ಕೆ ಬಂದ ಮೇಲೆಯೂ ದುರ್ಗಪ್ಪ ಸುಮ್ಮನೇ ಕೂಡಲಿಲ್ಲ. ಇಲ್ಲಿಯೂ ಪ್ರತಿದಿನ ಬಿಸಿಲು, ಮಳೆ ಲೆಕ್ಕಿಸದೇ ‘ಗರ್ದಿ ಗಮ್ಮತ್ತು’ ಅನ್ನು ತೆಗೆದುಕೊಂಡು ಹಾಡುತ್ತ ಓಣಿ ಓಣಿ ಅಲೆಯುವ ದುರ್ಗಪ್ಪ ಅವರಿಗೆ ದಣಿವೆಂಬುದು ಗೊತ್ತಿಲ್ಲ. ಇವರು ಕಳೆದ 45 ವರ್ಷಗಳಿಂದಲೂ ‘ಗರ್ದಿ ಗಮ್ಮತ್ತ’ನ್ನು ಜಾತ್ರೆಗಳಲ್ಲಿ ಕೊಂಡೊಯ್ದು ಮಕ್ಕಳ ಮನ ತಣಿಸುತ್ತಲೇ ಇದ್ದಾರೆ. ಈಗಲೂ ಪ್ರತಿದಿನ ಬಸ್ಸಿನಲ್ಲಿ ಆಸುಪಾಸಿನ ಊರುಗಳಿಗೆ ಹೋಗಿ :ಗರ್ದಿ ಗಮ್ಮತ್ತ:ನ್ನು ಪರಿಚಯಿಸುತ್ತಿದ್ದಾರೆ. ದುರ್ಗಪ್ಪ ಅವರನ್ನು ನೋಡಿ ಕೆಲವರು ಸೆಲ್ಫಿ ಅಂತ ಕೇಳಿದ್ದೂ ಇದೆ, ತೆಗೆದುಕೊಳ್ಳಿ ಅಂತಾರೆ, ಆದರೆ ಮೊಬೈಲ್ ನೋಡಿ ಇವರು ನಗುವುದಿಲ್ಲ, ಯಾಕೆ ಅಂತೀರಾ, ಇದು ಇವರ ‘ಗಮ್ಮತ್ತು’… ದುರ್ಗಪ್ಪ ಕೊಪ್ಪಳ ‘ಪ್ರತಿಧ್ವನಿ’ ಪ್ರತಿನಿಧಿ ಜೊತೆ ತಮ್ಮ ಅನುಭವ ಹಂಚಿಕೊಂಡಿದ್ದು ಹೀಗೆ– “ನಾನು 20 ವರ್ಷದವನಿದ್ದಾಗಲೇ ಸ್ವತಂತ್ರವಾಗಿ ‘ಗರ್ದಿ ಗಮ್ಮತ್ತು’ ತೋರಿಸಲು ಸಜ್ಜಾದೆ. ಆಗ ಒಂದು ಕುಟುಂಬದಲ್ಲಿ ಎರಡು ಅಥವಾ ಮೂರು ಪೆಟ್ಟಿಗೆಗಳು ಇರುತ್ತಿದ್ದವು. ನಾವು ಜಾತ್ರೆಗೆ ಹೋದರೆ ಸಾಕು, ಮಕ್ಕಳು ದುಂಬಾಲು ಬೀಳುತ್ತಿದ್ದರು. ಆಗ ಕೆಲವರು 5 ಪೈಸೆ ಅಥವಾ 10 ಪೈಸೆ ಕೊಡುತ್ತಿದ್ದರು. ಜಾತ್ರೆ ಇಲ್ಲದ ಸಮಯದಲ್ಲಿ ನಾವು ಓಣಿ ಕೇರಿಗಳಿಗೆ ಹಾಗೂ ಪಟ್ಟಣಗಳಿಗೆ ಹೋಗುತ್ತಿದ್ದೆವು. ಅಲ್ಲಿಯೂ ಕೆಲವು ಜನರು 5 ಪೈಸೆ ಕೊಡುತ್ತಿದ್ದರು. ಇಲ್ಲವಾದರೆ ಒಂದು ಲೋಟ ಜೋಳ ಅಥವಾ ಗೋದಿ ನೀಡುತ್ತಿದ್ದರು. ಆಗ ಅದೇ ನಮ್ಮ ಜೀವನ. ಈ ಪೆಟ್ಟಿಗೆಯು ನಮ್ಮ ಕುಟುಂಬದ ಹಸಿವು ನೀಗಿಸುವಲ್ಲಿ ಮುಖ್ಯ ಪಾತ್ರ ವಹಿಸಿವೆ. ಈಗ ನಾವು ಮೊಬೈಲ್ ಬಂದೈತಿ ಅದು-ಇದು ಬಂದೈತಿ ಅಂತ, ನಮ್ಮನ್ನು ಸಾಕಿ ಸಲುಹಿದ ಈ ಕಲೆಯನ್ನು ಬಿಡಬಾರದು ಎಂದು ಪ್ರತಿದಿನ ಈ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿದ್ದೇನೆ. ಇವತ್ತೂ ಈ ಪೆಟ್ಟಿಗೆ ನನಗೆ ದೇವರಿದ್ದಂತೆ. ಹಣವೇ ಮುಖ್ಯವಲ್ಲ ಇಲ್ಲಿ, ಮಕ್ಕಳು ಇದ ನೋಡಿ ಕೇಕೆ ಹೊಡಿಯುವುದನ್ನು ನೋಡಿದರೆ ನನ್ನ ಹೊಟ್ಟೆ ತುಂಬಿದಂತಾಗುತ್ತದೆ.”..! ಎಂದು ‘ಗರ್ದಿ ಗಮ್ಮತ್ತಿ’ನ ದುರ್ಗಪ್ಪ ತಮ್ಮ ಕಲೆಯ ವಾರಸುದಾರನಾಗಿ ಹೇಳಿಕೊಳ್ಳುತ್ತಾರೆ… ರೊಕ್ಕಾ ಬರೂದ ಕಷ್ಟ ಆದರೂ…– ಮೊಬೈಲ್ ಕ್ರಾಂತಿ ‘ಗರ್ದಿ ಗಮ್ಮತ್ತಿ’ನ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರಿದರೂ, ಅದರಲ್ಲೇ ಹೊಸತನದಿಂದ ಮಕ್ಕಳನ್ನು ನಗಸ್ತಿನಿ ಅಂತ ಮತ್ತೆ ಮಾತು ಶುರು ಹಚ್ಚಿಕೊಂಡರು ದುರ್ಗಪ್ಪ. “ಹೌದು ಸಾರ್, ಒಪ್ಪತಿನಿ, ಇಂದು ಮೊಬೈಲ್ ಎಲ್ಲಾ ಇವೆ. ಆದರೂ ನಾವು ಈಗ ಹೊಸದನ್ನೇನಾದರೂ ತೋರಿಸಬೇಕು, ಅದಕ್ಕಾಗಿ ಬಾಹುಬಲಿ, ರೋಬೋಟ್, ಅವತಾರ, ಕ್ರಿಶ್ ಹೀಗೆ ಹೊಸ ಹೊಸ ಹೀರೋಗಳ ಫೋಟೊಗಳನ್ನು ಸಂಗ್ರಹಿಸಿ ಡಬ್ಬಾ ಟಾಕೀಸ್‌ನಲ್ಲಿ ತೋರಿಸಿದಾಗ ಚಿಕ್ಕ ಮಕ್ಕಳು ಕೇಕೆ ಹೊಡೆಯುತ್ತ ನಕ್ಕು ನಲಿಯುತ್ತಾರೆ. ನಿಮಗೆಲ್ಲ ‘ಗರ್ದಿ ಗಮ್ಮತ್ತು’ ಹಳೆಯದು. ಆದರೆ ಈಗಿನ ಮಕ್ಕಳಿಗೆ ಇದು ಹೊಸದೇ ಅಲ್ಲವೇ. ಕೆಲವರಂತೂ ಮತ್ತೆ ಮತ್ತೆ ನೋಡಲು ಮುಗಿಬೀಳುತ್ತಾರೆ.”… ನಿಜ, ಇಂದಿನ ಮಕ್ಕಳಿಗೆ ಈ ಡಬ್ಬಾ ಟಾಕೀಸ್ ಹೊಸದು. ತಾವು ಚಿಕ್ಕಂದಿನಿಂದ ರೂಢಿಸಿಕೊಂಡ ಬಂದ ಈ ಪಾರಂಪರಿಕ ಮನರಂಜನಾ ವಿಧಾನವನ್ನು ಇಂದು ಹಲವರಿಗೆ ಮತ್ತೆ ಪರಿಚಯಿಸುತ್ತಿರುವ ದುರ್ಗಪ್ಪ, ಎಷ್ಟೋ ಜನರ ಮನದಲ್ಲಿ ಕಳೆದುಹೋದ ಪುಸ್ತಕಗಳ ಮರೆತ ಪುಟಗಳನ್ನು ಮತ್ತೇ ತಿರುವಿಹಾಕುವಂತೆ ಮಾಡಿ ಅವರ ಬಾಲ್ಯ ನೆನಪಿಸುತ್ತಿದ್ದಾರೆ… ಗದಗ ಜಿಲ್ಲೆಯ ರೋಣದ ಸಾಧು ಅಜ್ಜ ನಗರದ ಆರು ವಯಸ್ಸಿನ ಪುಠಾಣಿ ಪ್ರಶಾಂತ ಕುರಿ ಡಬ್ಬಾ ಟಾಕೀಸ್ ನೋಡಿ ಹೇಳಿದ್ದು ಹೀಗೆ– “ಆ ಅಜ್ಜನ ಹಾಡು, ಆ ಹಾಡಿಗೆ ತಕ್ಕ ಹಾಗೆಯೇ ಸಣ್ಣ ಟಾಕೀಸಿನಲ್ಲಿರುವ ಫೋಟೊಗಳು ಬರುತ್ತಿರುತ್ತವೆ. ಬಾಹುಬಲಿ ಶಿವಲಿಂಗವೆತ್ತಿ ಬರುತ್ತಿದ್ದ ಹಾಗೂ ಛೋಟಾ ಭೀಮನ ಚಿತ್ರ ಸೇರಿ ಎಲ್ಲ ಚೆನ್ನಾಗಿವೆ. ಇದೊಂಥರ ಮಜಾ. ಈ ಅಜ್ಜ ಮತ್ತೆ ಮತ್ತೆ ಬರಲಿ.”..! ದುರ್ಗಪ್ಪ ಅವರನ್ನು ಬಲ್ಲವರಾದ ಗದಗದ ಪರಮೇಶಪ್ಪ ಹಳ್ಳಿ ಹೇಳುವುದು ಹೀಗೆ– “ನಾವು ದುರ್ಗಪ್ಪ ಅವರನ್ನು ಕಳೆದ ಮೂವತ್ತು ವರ್ಷಗಳಿಂದ ನೋಡುತ್ತಿದ್ದೇವೆ. ಅವರು ಪ್ರತಿ ಜಾತ್ರೆಯಲ್ಲಿರುತ್ತಾರೆ. ಮುಂಜಾನೆಯಿಂದ ಸಂಜೆವರೆಗೂ ದಣಿಯದೇ ಹಾಡುತ್ತ ಮಕ್ಕಳನ್ನು ರಂಜಿಸುತ್ತಾರೆ. ಇಂಥವರನ್ನು ಸರ್ಕಾರ ಅಥವಾ ಸರ್ಕಾರೇತರ ಸಂಸ್ಥೆಗಳು ಗುರುತಿಸಬೇಕು. 3-4 ನಿಮಿಷಗಳವರೆಗೆ ಇರುವ ಒಂದು ಡಬ್ಬಾ ಟಾಕೀಸ್ ನೋಡುವುದಕ್ಕೆ ಈಗ 5 ರೂಪಾಯಿಗಳು ಮಾತ್ರ. ಪ್ರತಿದಿನ 120-150ರವರೆಗೆ ದುಡಿಯುವ ದುರ್ಗಪ್ಪ, ಇಂದಿನ ತಲೆಮಾರಿನ ಜನರಿಗೆ ‘ಗರ್ದಿ ಗಮ್ಮತ್ತಿ’ನ ಪರಿಚಯ ಮಾಡುತ್ತಿರುವುದು ಸ್ತುತ್ಯಾರ್ಹವಾಗಿದೆ…” ಗರ್ದಿ ಗಮ್ಮತ್ತಿನಲ್ಲಿ ಮೊದಲೇನಿರುತ್ತಿದ್ದವು?– 70ರಿಂದ 80ರ ದಶಕ– 70 ಹಾಗೂ 80ರ ದಶಕದಲ್ಲಿ ಅಮಿತಾಭ್ ಬಚ್ಚನ್, ಹೇಮಾ ಮಾಲಿನಿ, ರಾಜ್ ಕಪೂರ್, ದೇವಾನಂದ, ನೂತನ, ಶಮ್ಮಿ ಕಪೂರ್, ವಿಧಾನ ಸೌಧ, ತಾಜಮಹಲ್, ಇಂಡಿಯಾ ಗೇಟ್, ಗೇಟ್‌ವೇ ಆಫ್ ಇಂಡಿಯಾ ಇವೆಲ್ಲ ಫೋಟೊಗಳು ಚಿರಪರಿಚಿತವಾಗಿದ್ದವು..! 90ರ ದಶಕದ ನಂತರ– ಸಂಜಯ ದತ್, ಶಾರೂಖ್ ಖಾನ್, ಸಲ್ಮಾನ್ ಖಾನ್, ಆಮಿರ್ ಖಾನ್, ರವೀನಾ ಟಂಡನ್, ಶಕ್ತಿಮಾನ್, ರಾಮಾಯಣ ಮತ್ತು ಮಹಾಭಾರತದ ಪಾತ್ರಗಳು, ರಾಜೀವ್ ಗಾಂಧಿ ಮತ್ತು ಕಾರ್ಟೂನ್ ಹೀರೋಗಳಾದ ಮೋಗ್ಲಿ, ಹೀ-ಮ್ಯಾನ್, ಲಾಲ್‌ಬಾಗ್, ಕಬ್ಬನ್ ಪಾರ್ಕ್ ಇವೆಲ್ಲ ಸಾಮಾನ್ಯವಾಗಿರುತ್ತಿದ್ದವು..! 2010ರ ನಂತರ: 2010ರಲ್ಲಿ ‘ಗರ್ದಿ ಗಮ್ಮತ್ತು’ ಕಾಣೆಯಾದರೂ, 90ರ ದಶಕದ ಚಿತ್ರಗಳನ್ನಿಟ್ಟಕೊಂಡೇ ತೋರಿಸುತ್ತಿದ್ದ ದುರ್ಗಪ್ಪ, 2015ರ ನಂತರ ಹೊಸ ಚಿತ್ರಗಳನ್ನು ಸೇರಿಸತೊಡಗಿದರು. ಈ ಹೊಸ ಚಿತ್ರಗಳಲ್ಲಿ ಬಾಹುಬಲಿ, ಕಟ್ಟಪ್ಪ, ಬಲ್ಲಾಳದೇವ, ರೋಬೊ, ಅವತಾರ್, ಕ್ರಿಶ್, ಕೊಚ್ಚಾಡಿಯನ್, ಯಶ್, ದರ್ಶನ, ಪುನೀತ್ ರಾಜಕುಮಾರ, ಶಿವರಾಜಕುಮಾರ್, ಸುದೀಪ್ ಮತ್ತು ಕಾರ್ಟೂನ್ ತಾರೆಗಳಾದ ಛೋಟಾ ಭೀಮ್ ಹಾಗೂ ಬಾಲವೀರ್ ಸೇರ್ಪಡೆಯಾಗಿವೆ… ನಿಮಗೂ ನೆನಪುಂಟೇ?– ‘ಗರ್ದಿ ಗಮ್ಮತ್ತಿ’ನಿಂದ ಜೀವನ ನಡೆಸುತ್ತಿದ್ದ ಕೆಲವು ಸಮುದಾಯಗಳ ಜನರು ಇದೀಗ ಪರ ಊರುಗಳತ್ತ ಉದ್ಯೋಗ ಅರಸಿ ಹೋಗಿದ್ದಾರೆ. ಮೊದಲು ಮಳೆ-ಬೆಳೆ ಚೆನ್ನಾಗಿದ್ದ ಕಾರಣ, ರೈತಾಪಿ ಜನರು ಇವರಿಗೆ ಅಕ್ಕಿ, ಜೋಳ, ಗೋಧಿಯನ್ನು ಕೊಡುತ್ತಿದ್ದರು. ಈಗ ಬರ ತಾಂಡವವಾಡುತ್ತಿದೆ. ಇಲವೇ ಅತಿವೃಷ್ಟಿ ತಾಂಡವ ಆಡುತ್ತದೆ. ಆದ್ದರಿಂದ ಇವರೆಲ್ಲ ಇಂದು ತಮ್ಮ ಕುಲಕಸುಬುಗಳನ್ನು ಬಿಟ್ಟು ಹೊಸದನ್ನು ಹುಡುಕುತ್ತ ಬದುಕಲೆತ್ನಿಸುತ್ತಿದ್ದಾರೆ. ಇಂದಿನ ತಲೆಮಾರಿನ ಜನರು, ಅಂದರೆ ‘ಗರ್ದಿ ಗಮ್ಮತ್ತ’ನ್ನೇ ಕುಲಕಸುಬಾಗಿ ಜೀವನ ನಡೆಸುತ್ತಿದ್ದವರು ಇಂದು ಇದೇ ‘ಗರ್ದಿ ಗಮ್ಮತ್ತಿ’ನಿಂದ ಕೈ ತುಂಬಾ ಸಂಪಾದಿಸಲು ಆಗಲ್ಲ ಎಂಬ ಕಾರಣದಿಂದ ಹಂದಿ ಸಾಕಾಣಿಕೆ ಹಾಗೂ ಪ್ಲಾಸ್ಟಿಕ್ ಮಾರಾಟ ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದಾರೆ. ಗದಗ, ಬಾಗಲಕೋಟೆ, ಧಾರವಾಡ, ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಾಗಿರುವ ಈ ಜನರಲ್ಲಿ ಹಲವರು ಗುಳೆ ಹೋಗಿ, ಗೋವಾ, ಮಂಗಳೂರು ಹಾಗೂ ಸೊಲ್ಲಾಪುರಗಳಲ್ಲಿ ನೆಲೆಸಿದ್ದಾರೆ. ಹೀಗಾಗಿ ಇದು ಕಡಿಮೆಯಾಗುತ್ತ ಇಂದು ಕಣ್ಮರೆಯಾಗುವಂತಹ ದುಸ್ಥಿತಿಗೆ ಬಂದಿದೆ ‘ಗರ್ದಿ ಗಮ್ಮತಿ’ಗೆ. ಇಂದಿನ ಚಿಣ್ಣರು ಇದರ ಬಗ್ಗೆ ತಿಳಿಯಲಿ ಎಂಬುದು ನಮ್ಮ ಆಶಯವಾಗಿದೆ..! *********************************** ಕೆ.ಶಿವು.ಲಕ್ಕಣ್ಣವರ

ಜಾನಪದ Read Post »

ಇತರೆ

ಮಕ್ಕಳ ವಿಭಾಗ

ಗುಬ್ಬಚ್ಚಿ ಮಲಿಕಜಾನ್ ಶೇಖ್  ಒಂದು ಸುಂದರ ಕಾಡು. ಅಲ್ಲೊಂದು ಸಿಹಿ ನೀರಿನ ಹೊಂಡ. ಅದರ ದಂಡೆಗೆ ಆಲದ ಮರ, ಅದರ ಕೆಳಗಿದ್ದ ಜಾಲಿ ಮರವು ನೀರಿನತ್ತ ಬಾಗಿತ್ತು. ಅದರ ಟೊಂಗೆಗೆ ಒಂದು ಗುಬ್ಬಚ್ಚಿ ಗೂಡು ಕಟ್ಟಿಕೊಂಡು ಮಕ್ಕಳ ಜೊತೆ ವಾಸವಿತ್ತು. ಆ ಆಲದ ಮರದ ಮೇಲೆ ಕಾಗೆಗಳ ಗ್ಯಾಂಗು. ಅವರಲ್ಲಿ ಸಭ್ಯ ಕೋಗಿಲೊಂದು ವಾಸವಿತ್ತು.            ಗುಬ್ಬಚ್ಚಿಗೆ ಶಿಸ್ತು ಮತ್ತು ಸ್ವಚ್ಛತೆ ಬಹಳ ಇಷ್ಟ. ಅರುಣೋದಯದ ಮುಂಚೆ ಗೂಡಿನ ಹೊರ ಬಂದು ದೂರ ಹೋಗಿ ಶೌಚ ಮಾಡಿ, ಚಿಲಿಪಿಲಿ ಗಾನದಿ ಮರದಿಂದ ಮರಕ್ಕೆ ಜಿಗಿಯುತ್ತಾ, ನಲಿಯುತ್ತಾ… ಹೊಂಡಕ್ಕೆ ಸ್ನಾನಕ್ಕಾಗಿ ಹೋಗುತಿತ್ತು. ಸ್ನಾನ ಮಾಡಿ ಸೂರ್ಯನ ಎಳೆಯ ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಕೂತು, ಬುರ್ರೆಂದು ಗೂಡಿಗೆ ಬಂದು ಮಕ್ಕಳ ನೋಡಿ ತಿಂಡಿ ಹುಡುಕಲು ಭರ್ರೆಂದು ಹೋಗುತ್ತಿತ್ತು.         ಅತ್ತ ಕಾಗೆಗಳ ದಿನಚರಿ ಬೇರೇನೆ. ಎಲ್ಲರಿಗಿಂತ ತಡವಾಗಿ ಎದ್ದು ಕಾವ್ ಕಾವ್ ಗದ್ದಲ ಸುರು ಇಡುತ್ತಿದ್ದವು. ಅಲ್ಲಿ, ಇಲ್ಲಿ ಎಲ್ಲಿಯೂ ಸಿಕ್ಕ ಸಿಕ್ಕಲ್ಲಿ ಶೌಚ ಮಾಡುತ್ತಿದ್ದವು. ಗಾನವಿಲ್ಲ, ಸ್ನಾನವಿಲ್ಲ . ನೇರ ಹಳಸಿದ ಅನ್ನ ಅಥವಾ ಸತ್ತ ಪ್ರಾಣಿ ತಿನ್ನಲು ಅವರ ಗ್ಯಾಂಗು ಭರ್ರೆಂದು ರವಾನೆ ಆಗುತಿತ್ತು. ಅವೆಲ್ಲಾ ಹೋದ ನಂತರ ಕೋಗಿಲೆ ಮಾತ್ರ ಗುಬ್ಬಚ್ಚಿಯಂತೆ ಸ್ವಚ್ಛ ಸ್ನಾನ ಮಾಡಿ ಮಾವಿನ ಅಥವಾ ಹುಣಸೆ ಚಿಗುರು ತಿಂದು ಕೂಡುತ್ತಿತ್ತು.               ಒಂದು ದಿನ ಗುಬ್ಬಚ್ಚಿ ಮಕ್ಕಳ ತಿಂಡಿಗಾಗಿ ಹೋದಾಗ ಕಾಗೆಗಳೆಲ್ಲಾ ಕೂಡಿ ದೊಡ್ಡ ರಂಪಾಟವನ್ನೆ ಮಾಡಿದ್ದವು. “ಕೋಗಿಲೆ ನಮ್ಮ ಜಾತಿಯವಳಲ್ಲಾ, ಅವಳಿಗೆ ನಮ್ಮ ಪರಂಪರೆ ಗೊತ್ತಿಲ್ಲಾ..” ಎಂದು ಹೇಳಿ ಕಾಗೆ ಗ್ಯಾಂಗು ಅದಕ್ಕೆ  ಕಾಡಿ, ಕಚ್ಚಿ ಹಾರಿ ಹೋಗಿತ್ತು. ಅಷ್ಟರಲ್ಲಿ ಗುಬ್ಬಚ್ಚಿ ಚುಂಚಿನಲ್ಲಿ ತಿಂಡಿ ತಂದು ಚಿಂವ್ ಚಿಂವ್ ಎಂದು ಬಾಯಿ ತೆರೆದು ಕೂತ ಮಕ್ಕಳ ಬಾಯಿಗೆ ಹಾಕಿದಾಗ ಮಕ್ಕಳು, “ಅಮ್ಮಾ, ಛೀ.. ಥೂ ಏನೋ ವಾಸನೆ,,” ಎಂದವು. ಅದಕ್ಕೂ ವಾಸನೆ ಸಹಿಸದು, ಹೊರಬಂದು ನೋಡಿದರೆ ಅಲ್ಲಿ ಕಾಗೆ ಶೌಚ ಮಾಡಿತ್ತು. ಸಿಟ್ಟು ಬಂತು. ಆದರೆ ಅಲ್ಲಿ ಯಾರು ಇಲ್ಲ. ಸುಮ್ಮನಾಗಿ ಸ್ವತಃ ಕಡ್ಡಿಯಿಂದ ತೆಗೆದು ಹಾಕಿತು. ಆಗ ಅದರ ಗಮನ ಎಲೆಯಲ್ಲಿ ಭಯದಿಂದ ಅವಿತ ಕೋಗಿಲೆಯತ್ತ ಹೋಯಿತು. “ಏನ್ ಕೋಗಿಲಕ್ಕಾ ಹೀಗೆ ಕೂತೆಯಲ್ಲಾ ಏನಾಯಿತು..?” ಎಂದು ಕೇಳಿತು. ಆಗ ಕೋಗಿಲೆ ಅಳುತ್ತಾ, “ಗುಬ್ಬಕ್ಕಾ ಏನ್ ಹೇಳಲಿ ನನ್ನ ಪಾಡು, ಇಷ್ಟು ದಿನ ಸುಮ್ಮನಿದ್ದು ಇಂದು ಒಮ್ಮೇಲೆ ನೀನು ನಮ್ಮ ಜಾತಿಯವಳು ಅಲ್ಲಾ, ಹೋಗು ಇಲ್ಲಿಂದ ಅಂದವು. ನೀನೆ ಹೇಳು ಗುಬ್ಬಕ್ಕಾ,, ನಮ್ಮಮ್ಮಾ ಇಲ್ಲಿ ಮೊಟ್ಟೆ ಇಡುವಾಗ ಇವರ ಜಾತಿ ಕೇಳಿದಳಾ, ಇಲ್ಲವಲ್ಲ.” ಎಂದು ಹೇಳಿತು. ಆಗ “ಇರಲಿ ಬಿಡು ಕೋಗಿಲಕ್ಕಾ, ಹುಚ್ಚು ಕಾಗೆಗಳು ಅವು..” ಗುಬ್ಬಚ್ಚಿ ಸಾಂತ್ವನ ಮಾಡಲು ಕೋಗಿಲೆ, “ಇಲ್ಲ.. ನಾನಿಲ್ಲಿ ಇರುವದಿಲ್ಲಾ, ಸಂಕಟದಲ್ಲಿ ಇವರೆ ನನ್ನ ಹತ್ತಿರ ಬರುತ್ತಾರೆ..” ಹೇಳಿ ಬುರ್ರೆಂದು ಹಾರಿತು.                  ಎಲ್ಲ ಹಕ್ಕಿಗಳು ರವಿ ಮುಳುಗುತ್ತಿದ್ದಂತೆ ಗೂಡು ಸೇರುತಿದ್ದವು. ಆದರೆ ಕಾಗೆಗಳು ಮಾತ್ರ ತಡವಾಗಿ ಬಂದು ಒಂದೆರಡು ತಾಸು ಗಲಭೆ ಮಾಡಿ ಮಲಗುವ ರೂಢಿ. ಕಾಗೆಗಳು ಬಂದ ತಕ್ಷಣ ಗುಬ್ಬಚ್ಚಿ, “ಯಾರು ನನ್ನ ಗೂಡಿನ ಮೇಲೆ  ಶೌಚ ಮಾಡಿದಿರಿ, ಸ್ವಲ್ಪನಾದರೂ ಮಾನ ಮರ್ಯಾದೆ ಇದೆಯಾ ನಿಮಗೆ..?” ಎಂದು ರೇಗುತ್ತದೆ. ಈ ಮಾತು ಕೇಳಿದ ನಾಯಕ ಕಾಗೆ, “ಯಾರು ಗುಬ್ಬಿನಾ, ಲೇ ನೀನು ನನ್ನ ಕೊಕ್ಕಿನಷ್ಟು ಇದ್ದಿಯಾ..? ನನ್ನ ಮುಂದೆ ಮಾತನಾಡುವ ಧೈರ್ಯ ನಿನಗೆ. ನಿಲ್ಲು ನಿನ್ನನ್ನು..” ಅಷ್ಟರಲ್ಲಿ ಇನ್ನೊಂದು ಕಾಗೆ, “ಇರಲಿ, ಶಾಂತ ಆಗಣ್ಣಾ, ಬೇಡಾ. ಅದು ನಮಗೆಲ್ಲಿ ಸಾಲುತ್ತದೆ, ಲೇ ಗುಬ್ಬಿ ನಾನೇ ಶೌಚ ಮಾಡಿದ್ದು, ಏನು ಇವಾಗ..?” “ಅಲ್ಲಪ್ಪಾ ಕಾಗೆಗಳಿರಾ, ನೀವೆಲ್ಲಾ ಹೀಗೆ ಹೊಲಸು ತಿಂದು ಸುತ್ತಮುತ್ತ ಗಲೀಜು ಮಾಡಿದರೆ ಹೇಗೆ..? ನಿಮ್ಮ ಕ್ರೂರ ಕರ್ಮ ನಾಳೆ ನಮ್ಮ ಇಡಿ ಪಕ್ಷಿ ಸಂಕುಲಕ್ಕೆ ಸಂಕಟ ತರಬಹುದು..” ಎಂದು ಗುಬ್ಬಚ್ಚಿ ಬುದ್ಧಿ ಮಾತು ಹೇಳಲು ಹೋದಾಗ, ಕಾಗೆಗಳೆಲ್ಲಾ ಗಹ ಗಹಿಸಿ ನಗುತ್ತಾ, “ನಮಗೆ ಬುದ್ಧಿ ಮಾತು ಹೇಳಬೇಡ. ನೀನ್ಯಾರು,,? ನಮ್ಮ ರಕ್ಷಣೆಗೆ ದೇವಿ ಕಾಗಮ್ಮಾ ಇದ್ದಾಳೆ..” ಎಂದವು. ಆಗ ಗುಬ್ಬಚ್ಚಿ ಸುಮ್ಮನೆ ಹೋಗಿ ಮಕ್ಕಳೊಂದಿಗೆ ಮಲಗುತ್ತದೆ.              ರಾತ್ರಿ ಪೂರ್ಣ ಮಳೆ. ರವಿ ಬಂದಿದ್ದು ಕಾಣುತ್ತಿರಲಿಲ್ಲ, ಅಷ್ಟು ಧಾರಾಕಾರ ಮಳೆ. ಮಧ್ಯಾಹ್ನ ಕಾಗೆಗಳಿಗೆ ಹಸಿವೆಯಾಗಿ ಜಿಟಿ ಜಿಟಿ ಮಳೆಯಲ್ಲಿಯೆ ರಾತ್ರಿ ತಂದ ಕೊಳೆತ ಮೌಂಸವನ್ನು ತಿನ್ನಲು ಪ್ರಾರಂಭ ಮಾಡುತ್ತವೆ. ಅದರಲ್ಲಿ ಒಂದು ಕಾಗೆ ಗುಬ್ಬಚ್ಚಿಯನ್ನು ತೆಗಳುತ್ತಾ, “ಏ ಸಾಧು ಗುಬ್ಬಿ, ನಿನ್ನೆ ರಾತ್ರಿ ಬಹಳ ಮಾತನಾಡುತಿದ್ದಿಯಲ್ಲಾ ಈಗೇನು ತಿನ್ನುತ್ತೀಯಾ, ಚಳಿ ಇದೆ, ಸಾಯುತ್ತಿ ಹಿಡಿ ತಿನ್ನು” ಎಂದು ಕೊಳೆತ ಮೌಂಸದ ತುಣುಕು ಗೂಡಿನತ್ತ ಬೀಸಿತು.          ಕಾಗೆಯ ಬಾಯಿಗೆ ಏಕೆ ಸಿಕ್ಕಬೇಕೆಂದು ಗುಬ್ಬಚ್ಚಿ ಗೂಡು ಬಿಟ್ಟು ಬರಲಿಲ್ಲ. ಗೂಡಿನಲ್ಲಿದ್ದ ಸ್ವಲ್ಪ ಕಾಳು ಮಕ್ಕಳಿಗೆ ತಿನ್ನಲು ಕೊಟ್ಟು ತಾನು ಎರಡು ದಿನ ಉಪವಾಸ ಮಾಡಿತು. ಅದಕ್ಕೆ ಗೊತ್ತಿತ್ತು ಸಂಕಟ ಬಹಳ ದಿನ ಇರುವದಿಲ್ಲ. ಮಾರನೆಯ ದಿನ ಮಳೆ ನಿಂತಿತು. ಏನಾದರೂ ತಿನ್ನಲು ತರಬೇಕೆಂಬ ವಿಚಾರದಲ್ಲಿ ಹೊರಗೆ ಬಂದು ನೋಡಿದರೆ, ಕಾಗೆಗಳು ಅದರ ಗೂಡಿನ ಸುತ್ತಲೆಲ್ಲಾ ಶೌಚ ಮಾಡಿ, ಎಲುಬು ತೂಗು ಹಾಕಿದ್ದವು. ಗುಬ್ಬಚ್ಚಿಗೆ ಭಯವಾಯಿತು. ಇಲ್ಲಿಯೆ ಇದ್ದರೆ ಈ ಕಾಗೆಗಳು ಬದುಕಲು ಬಿಡುವದಿಲ್ಲ ಎಂದು ತಿಳಿದು ಮಕ್ಕಳನ್ನು  ತನ್ನ ರೆಕ್ಕೆ ಮೇಲೆ ಕೂಡಿಸಿಕೊಂಡು ಮತ್ತೊಂದು ಕಾಡಿಗೆ ಬುರ್ರನೆ ಹಾರಿತು.               ಗುಬ್ಬಚ್ಚಿ ಹೇಳುತಿತ್ತು, ಕೇಳುತಿತ್ತು ಆದರೆ ಈಗ ಮಾತ್ರ ಕಾಗೆಗಳಿಗೆ ಹೇಳುವರಿಲ್ಲಾ, ಕೇಳುವವರಿಲ್ಲಾ. ಅವುಗಳ ಕ್ರೂರತೆ ಮತ್ತಷ್ಟು ಹೆಚ್ಚಾಯಿತು. ಸಿಕ್ಕಿದೆಲ್ಲಾ, ಸತ್ತಿದೆಲ್ಲಾ ತಿನ್ನಲು ಪ್ರಾರಂಭ ಮಾಡಿದವು. ಒಮ್ಮೆ ದೂರ ದೇಶದ ಬಾವುಲಿಗಳು ಅಲ್ಲಿಗೆ ಬಂದು ಸತ್ತು ಬಿದ್ದಿದ್ದವು. ಸಂಜೆ ಹೊತ್ತು ಮನೆಯತ್ತ ಬರುವಾಗ ಕಾಗೆಗಳ ನಾಯಕನ ಕಣ್ಣು ಅತ್ತ ಬಿದ್ದಾಗ ಸಂತೋಷದಿಂದ ತಕ್ಷಣ ಎಲ್ಲ ಕಾಗೆಗಳನ್ನು ಕರೆದು ಬೇಟೆ ಎತ್ತಿಕೊಂಡು ಮರದತ್ತ ಒಯ್ಯಲು ಹೇಳಿತು. ಅಂದು ಕಾಗೆಗಳ ಸಂಭ್ರಮ ಹೇಳತೀರದು, ಅವುಗಳ ಕಿರುಚಾಟ ಕಾಡು ತುಂಬಿತ್ತು. ಇದನ್ನು ನೋಡಿದ ಎರಡು ಮುದಿ ಕಾಗೆ, “ಏ,, ಏನು ತಿನ್ನುತ್ತಿದ್ದೀರಿ.. ಛೀ, ನಾವು ಎಂದಿಗೂ ಇಂತಹ ಪ್ರಾಣಿಗಳನ್ನು ತಿಂದಿಲ್ಲಾ, ಮೂರ್ಖಗಳಿರಾ.. ನಮಗೆಲ್ಲಾ ದೊಡ್ಡ ವಿಪತ್ತು ಕಾದಿದೆ..” ಎಂದು ಹೇಳಿ ಅವು ಸಹ ಅಲ್ಲಿಂದ ಭರ್ರೆಂದು ಹಾರಿ ಹೋದವು.                        ಮರುದಿನ ನೋಡಿದರೆ ಎಲ್ಲ ಕಾಗೆಗಳು ಅಲ್ಲಲ್ಲೆ ಸಾಯಲು ಪ್ರಾರಂಭ ಮಾಡಿದವು. ಅವುಗಳಿಗೆ ಬಾವುಲಿಯ ರೋಗ ತಗಲಿತ್ತು. ಆ ಮಹಾಮಾರಿ ಅತ್ಯಂತ ವೇಗವಾಗಿ ಕಾಡಿನ ತುಂಬೆಲ್ಲಾ ಪಸರಿಸಿತು. ಎಲ್ಲ ಪಕ್ಷಿಗಳ ಪ್ರಾಣಕ್ಕೆ ಕುತ್ತು ಬಂತು. ಇಡೀ ಕಾಡು ಹಕ್ಕಿ ಇಲ್ಲದಂತೆ ಆಗುವ ಭಯಾನಕ ಪರಿಸ್ಥಿತಿ ನಿರ್ಮಾಣವಾಯಿತು. ಇದು ಆ ಮುದಿ ಕಾಗೆಗಳಿಗೆ ಗೊತ್ತಾಯಿತು. ಒಂದು ಕಾಲದಲ್ಲಿ ಇಂತಹ ಮಹಾಮಾರಿ ಬಂದಾಗ ಕೋಗಿಲೆ ತಂದ ಸಂಜೀವಿನಿ ಕಡ್ಡಿಯಿಂದ ಪಕ್ಷಿ ಸಂಕುಲ ಉಳಿದಿದ್ದು ಅವುಗಳ ನೆನಪಿಗೆ ಬಂತು. ಆದರೆ “ಕೋಗಿಲೆ ನಮ್ಮ ಮೇಲೆ ಸಿಟ್ಟಾಗಿ ಹೋಗಿದೆ ಅದನ್ನು ನಾವು ಕೇಳಿದರೆ ಕೊಡುವದಿಲ್ಲ,, ಏನು ಮಾಡುವುದೆಂದು..” ಮುದಿ ಕಾಗೆ ಚಿಂತಿಸಲು ಮತ್ತೊಂದು ಕಾಗೆ, “ಅದರ ಪ್ರೀತಿಯ ಗೆಳತಿ ಗುಬ್ಬಚ್ಚಿ ಕೇಳಿದರೆ ಇದಕ್ಕೆ ಸಹಕರಿಸಬಹುದು…” ಎಂಬ ವಿಚಾರದಲ್ಲಿ ಗುಬ್ಬಚ್ಚಿ ಹುಡುಕಿ ಮತ್ತೊಂದು ಕಾಡಿಗೆ ಹೊರಟವು.                ಕೊನೆಗೆ ಬಹಳ ಪರಿಶ್ರಮದಿಂದ ಗುಬ್ಬಚ್ಚಿಯನ್ನು ಹುಡುಕಿ, ಕ್ಷಮೆ ಕೇಳಿ, “ಗುಬ್ಬಕ್ಕಾ, ನಮ್ಮ ಕಾಗೆಗಳು ಮಾಡಿದ ತಪ್ಪಿನಿಂದ ನಾವೆಲ್ಲರೂ ದೊಡ್ಡ ಸಂಕಟದಲ್ಲಿ ಸಿಲುಕಿದ್ದೇವೆ. ದಯವಿಟ್ಟು ನಮಗೀಗ ಸಂಜೀವಿನಿ ಕಡ್ಡಿ ಬೇಕು. ನೀನು ಸಹಕರಿಸಿದರೆ ಕೋಗಿಲೆ ನಮಗೆ ಕೊಡುತ್ತದೆ. ನಮ್ಮೆಲ್ಲರ ಪ್ರಾಣ ಉಳಿಯುತ್ತದೆ..” ಎಂದು ವಿನಂತಿಸಿ ಕೊಂಡವು. ತಕ್ಷಣ ಗುಬ್ಬಚ್ಚಿ ಕೋಗಿಲಕ್ಕನ ಹತ್ತಿರ ಹೋಗಿ ಎಲ್ಲ ಪರಿಸ್ಥಿತಿಯನ್ನು ಹೇಳುತ್ತಾಳೆ. ‘ಅಯ್ಯೋ..! ದೊಡ್ಡ ಸಂಕಟವೇ ಉದ್ಭವ ಆಗಿದೆಯಲ್ಲಾ..” ಎಂದು ಜೀವ ಪರ್ವತದ ಮೇಲೆ ಹೋಗಿ ಸಂಜೀವಿನಿ ಕಡ್ಡಿಯನ್ನು ತಂದು ಆ ಮಹಾಮಾರಿಯಿಂದ ಪಕ್ಷಿ ಸಂಕುಲವನ್ನು ಬದುಕಿಸುತ್ತದೆ. ಎಲ್ಲ ಹಕ್ಕಿಗಳು ಕೋಗಿಲೆಗೆ ಧನ್ಯವಾದ ಹೇಳುತ್ತವೆ. ಮುಂದೆ ಎಲ್ಲ ಹಕ್ಕಿ ಸಭ್ಯರಾಗಿ, ಪ್ರೀತಿಯಿಂದ ಒಬ್ಬರನೊಬ್ಬರು ವಿಶ್ವಾಸದಲ್ಲಿ ಕಾಣುತ್ತಾ ಬದುಕುತ್ತವೆ. *****

ಮಕ್ಕಳ ವಿಭಾಗ Read Post »

ಇತರೆ

ಪ್ರಸ್ತುತ

ನಿಜವಾದ ವಿಮೋಚಕ ಸುರೇಶ ಎನ್ ಶಿಕಾರಿಪುರ ಹಿಂದೂ ಧರ್ಮದ ಪ್ರಕಾರ ಹೆಣ್ಣುಮಕ್ಕಳಿಗೆ ಆಸ್ತಿಯ ಹಕ್ಕಿರಲಿಲ್ಲ. ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ ಎಂಬ ಮಾತಿನ ಮೂಲಕ ತವರಿನ ಯಾವುದೇ ಆಸ್ತಿಗೆ ಆಕೆ ಹಕ್ಕುದಾರಳಲ್ಲ ಸಂಬಂಧದವಳಲ್ಲ ಎಂಬುದನ್ನು ನೆಲೆಗೊಳಿಸಲಾಗಿತ್ತು. ಅವಳಿಗೆ ತವರಿನ ಆಸ್ತಿಯೇನಾದರೂ ಇದ್ದರೆ ಅದು ಆಕೆಯ ತಾಯಿ ಮಾತ್ರವೇ ಆಗಿರುತ್ತಿದ್ದಳು. ಅದೂ ಬದುಕಿದ್ದರೆ ಇಲ್ಲದಿದ್ದರೆ ಅದೂ ಇಲ್ಲ. ಹಿಂದೆಲ್ಲಾ ಬಾಲ್ಯ ವಿವಾಹವಾಗಿ ಚಿಕ್ಕ ವಯಸ್ಸಿನಲ್ಲೇ ಗಂಡ ತೀರಿ ಹೋದರಂತೂ ಮುಗಿಯಿತು. ಇಟ್ಟುಕೊಂಡರೆ ಗಂಡನ ಮನೆ ಇಲ್ಲದಿದ್ದರೆ ತವರು ಮನೆ. ಹೊಟ್ಟೆ ಪಾಡಿಗಾಗಿ ಆಕೆ ಅಣ್ಣ ಅತ್ತಿಗೆ ನಾದಿನಿ ಅತ್ತೆ ಮಾವ ಮಲತಾಯಿ ಎಲ್ಲರನ್ನೂ ಸಹಿಸಿಕೊಂಡು ದೀನಳಾಗಿ ಬದುಕಬೇಕಾದ ದುಸ್ಥಿತಿ ಇತ್ತು. ತುತ್ತಿನ ಚೀಲ ತುಂಬಿಕೊಳ್ಳಲು ಆಕೆ ಎಲ್ಲ ಅವಮಾನಗಳನ್ನು ಸಹಿಸಿಕೊಂಡು ಇದ್ದು ಸಾಯಬೇಕಾಗಿತ್ತು. ಮೇಲ್ವರ್ಗ ಮೇಲ್ಜಾತಿಯ ಕುಟುಂಬಗಳಲ್ಲಂತೂ ಇದು ಅವ್ಯಾಹತ. ಆಸ್ತಿ ಕೊಡುವ ಯೋಚನೆ ಆಕೆಯ ಸಹೋದರನಿಗೋ ತಂದೆಗೋ ಇದ್ದರೆ ಅದನ್ನು ಆಕ್ಷೇಪಿಸುವ ವಿರೋಧಿಸುವ ಅತ್ತಿಗೆಯೋ ನಾದಿನಿಯೋ ಮಲತಾಯಿಯೋ ಇರುತ್ತಿದ್ದಳು‌. ಅಂದರೆ ಶೋಷಿತ ಹೆಣ್ಣು ಹೆಣ್ಣಿನಿಂದಲೇ ಈ ಪರಿಯ ಹಿಂಸೆ ವಧೆ ಅನುಭವಿಸಬೇಕಾಗಿತ್ತು. ಹೆಣ್ಣು ಹೆಣ್ಣಿಗೇ ಆಸರೆ ಎಂಬುದು ಮಾತ್ರ ಇಂತಹಾ ಸಂದರ್ಭದಲ್ಲಿ ಸುಳ್ಳಾಗದೇ ಇರುವುದಿಲ್ಲ. ಇಲ್ಲಿ ಒಂದು ಜೀವಕ್ಕಿಂತ ತನ್ನ ಕುಟುಂಬದ ತನ್ನ ಮಕ್ಕಳ ಸ್ವಾರ್ಥ ಮುಖ್ಯವಾಗುತ್ತದೆ. ಹಾಗಾಗಿ ವಿಧವೆಯೋ ನಿರ್ಗತಿಕಳೋ ಆದ ಹೆಣ್ಣಿಗೆ ಹೀನಾಯವಾದ ಬಾಳು ತಪ್ಪುತ್ತಿರಲಿಲ್ಲ. ಗಂಡ ಸತ್ತ ಮೇಲೆ ಚಿತೆ ಏರುತ್ತಿದ್ದ ಬಹುತೇಕ ಹೆಣ್ಣು ಮಕ್ಕಳು ಇಂಥಹಾ ಭೀಕರ ಭವಿಷ್ಯವನ್ನು ಕಲ್ಪಿಸಿಕೊಂಡೇ ಚಿತೆ ಏರಲು ನಿರ್ಧರಿಸುತ್ತಿದ್ದದ್ದೂ ಇದೆ. ಗಂಡ ಸತ್ತ ಮೇಲೆ ನಮಗೇನೂ ಇಲ್ಲ ಎಂಬುದು ಹೆಚ್ಚಿನದಾಗಿ ಅವಳು ಆಸ್ತಿಯ ಹಕ್ಕಾಗಲೀ ಬದುಕುವ ಬಾಳುವ ಅವಕಾಶವಾಗಲೀ ಇಲ್ಲದ ದುರ್ಬರ ಸನ್ನಿವೇಷವನ್ನು ಎದುರಿಸಬೇಕಾದ ಭೀತಿಯನ್ನೇ ದ್ವನಿಸುತ್ತದೆ. ಬಾಬಾ ಸಾಹೇಬ ಅಂಬೇಡ್ಕರರು ಹಿಂದೂ ಕೋಡ್ ಬಿಲ್ಲನ್ನು ತರಲು ಹೋರಾಡಿದ್ದು ಇದೇ ಉದ್ದೇಶಕ್ಕೆ‌. ಭಾರತದ ಹಿಂದೂ ಮಹಿಳೆಯರ ವಿಮೋಚಕ ಬಾಬಾ ಸಾಹೇಬರೇ ಆಗಿದ್ದಾರೆ. ಅವರು ಹಿಂದೂ ಕೋಡ್ ಬಿಲ್ಲಿನ ಮೂಲಕ ಹಿಂದೂ ಮಹಿಳೆಯ ಆಸ್ತಿಯ ಹಕ್ಕನ್ನು ಪ್ರತಿಪಾದಿಸಿದ್ದು ನಮ್ಮ ಸಂಪ್ರದಾಯವಾದೀ ಹಿಂದೂ ಪುರುಷ ಪುಂಗವರಿಗೆ ಸರಿ ಬರಲಿಲ್ಲ. ಅವರ ಪ್ರಕಾರ ಹಿಂದೂ ಧರ್ಮವೆಂಬ ಆಲದ ಮರಕ್ಕೆ ಬಾಬಾ ಸಾಹೇಬರು ಕೊಡಲಿ ಪೆಟ್ಟು ನೀಡುತ್ತಿದ್ದಾರೆಂಬುದೇ ನುಂಗಲಾರದ ತುತ್ತಾಗಿತ್ತು. ಒಂದು ಧರ್ಮದಲ್ಲಿ ಸುಧಾರಣೆ ತಂದರೆ ಅದು ಹೇಗೆ ಧರ್ಮಕ್ಕೆ ಚ್ಯುತಿ ಬರುತ್ತದೋ ಕಾಣೆ. ಬದಲಾವಣೆ ಇಲ್ಲದ ಧರ್ಮಕ್ಕೆ ಭವಿಷ್ಯವೂ ಇಲ್ಲ ಉಳಿಗಾಲವೂ ಇಲ್ಲ. ಹೆಣ್ಣು ಧರ್ಮದ ಭಾಗವೋ ಹೊರತು ಆಕೆ ಧರ್ಮ ಭ್ರಷ್ಟಳಲ್ಲ. ಹೆಣ್ಣನ್ನು ಗೌರವಿಸದ ಬದುಕಲು ಬಿಡದ ಧರ್ಮ ಧರ್ಮವೇ ಅಲ್ಲ. ಹಿಂದೂ ಸೋಗು ಹಾಕಿಕೊಂಡಿರುವ ಸನಾತನ ವೈದಿಕರಿಗೆ ಅಂಬೇಡ್ಕರರ ಈ ಹಿಂದೂ ಕೋಡ್ ಬಿಲ್ ಪುರಿಗಣೆಯಾಗಿ ಕಾಡಿದ್ದರ ಪರಿಣಾಮವೇ ಅವರು ಆ ಬಿಲ್ ಪಾಸಾಗದಂತೆ ತಡೆಯುವ ಎಲ್ಲಾ ಹೋರಾಟವನ್ನೂ ತಂತ್ರ ಕುತಂತ್ರಗಳನ್ನೂ ಶುರುವಿಟ್ಟುಕೊಂಡರು. ಮಹಿಳಾ ಪರವಾದ ಕಾಯ್ದೆಯನ್ನು ಮಹಿಳೆಯರ ಮೂಲಕವೇ ಹಿಮ್ಮೆಟ್ಟಿಸಲು ಹರಸಾಹಸ ಪಟ್ಟು ಹೋರಾಡಿದರು. ಜಢ ಸಮಾಜದ ಸಿಕ್ಕುಗಳಲ್ಲಿ ಸಿಕ್ಕು ನಾಶವಾಗುತ್ತಿದ್ದ ಮಹಿಳೆಯರನ್ನು ರಕ್ಷಿಸಲು ಅಂಬೇಡ್ಕರ್ ಪ್ರಾಮಾಣಿಕ ಮತ್ತು ನಿರ್ಣಾಯಕ ಹೋರಾಟ ನಡೆಸಿದ್ದರು. ಆದರೆ ಅವರಿಗೆ ಸಹಕಾರ ಸಿಗಲಿಲ್ಲ ಬಿಲ್ ಇದ್ದದ್ದು ಇದ್ದಂತೆ ಜಾರಿಗೆ ಬರಲಿಲ್ಲ. ಬಾಬಾ ಸಾಹೇಬರು ರಾಜಿನಾಮೆ ಸಲ್ಲಿಸಿದರು. ನಮ್ಮ ಮಹಿಳೆಯರು ಕೆಲವರು ಮಾತ್ರ ಚರಿತ್ರೆಯ ಈ ಘಟನೆಯನ್ನು ಮರೆತು ತಮ್ಮನ್ನು ತುಳಿಯುವ ಮನು ಸಿದ್ಧಾಂತಿಗಳ ಜೊತೆ ಕೈ ಜೋಡಿಸಿ ತಮ್ಮನ್ನು ತಾವೇ ಬಲಿಹಾಕಿಕೊಳ್ಳುತ್ತಿದ್ದಾರೆ. ಬಾಬಾ ಸಾಹೇಬರ ಪ್ರಯತ್ನದ ಫಲ ಬಿಲ್ ಬಹಳಷ್ಟು ತಿದ್ದುಪಡಿಗಳ ಮೂಲಕ ಪಾಸಾಗಿ ಮಹಿಳೆಯರಿಗೆ ಆಸ್ತಿಯ ಹಕ್ಕು ಲಭಿಸಿದ್ದರೂ ಈ ಸಮಾಜ ಅದನ್ನಿನ್ನು ಮಾನಸಿಕವಾಗಿ ಒಪ್ಪಿಲ್ಲ. ಅದರ ಅಂತರಂಗದೊಳಗೆ ಆಕೆಗೆ ಯಾವ ಹಕ್ಕೂ ಇನ್ನೂ ದೊರೆತಿಲ್ಲ. ಅವಳು ಈ ವಿಚಾರದಲ್ಲಿ ಬಹುದೊಡ್ಡ ವಂಚನೆ ಅನುಭವಿಸುತ್ತಿದ್ದಾಳೆ. ಸಮಾಜ ಅವಳ ಬಾಳು ಕೆಟ್ಟಿತೆಂದರೆ ಈಗಲೂ ಅನಾಥಳಾಗಿಯೇ ಇರಿಸುವ ಮನಸ್ಥಿತಿಯಲ್ಲಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಬಾಬಾ ಸಾಹೇಬರ ಹೋರಾಟದ ಒಳಗಿನ ಅಂತಃಕ್ಕರಣ ಎಲ್ಲರಿಗೂ ಅರ್ಥವಾಗಬೇಕು. ಮಹಿಳೆಯು ದೇವರು ಮತ್ತು ಭಕ್ತಿಯ ಹಾಗೂ ಪುರುಷಪ್ರಧಾನ ಧಾರ್ಮಿಕ ವ್ಯವಸ್ಥೆಯು ಹೇರುವ ಮೂಲಕ ನಂಬಿಸಲ್ಪಟ್ಟ ಮೌಢ್ಯಗಳಿಂದ ಹಾಗೂ ಸಂಪ್ರದಾಯ ಕಟ್ಟುಕಟ್ಟಳೆಗಳ ದಾಸ್ಯದಿಂದ ಹೊರಬಂದು ಹಕ್ಕನ್ನು ಪಡೆಯುವ, ಶೋಷಣೆಯನ್ನು ಪ್ರಶ್ನಿಸುವ ದಾಸ್ಯವನ್ನು ನಿರಾಕರಿಸುವ ಪ್ರಗತಿಶೀಲೆಯರಾಗಬೇಕು ಎಂದೇ ಅವರು ಮಹಿಳೆಯರು ದೇವಾಲಯಗಳ ಮುಂದು ಸಾಲುಹಚ್ಚಿ ನಿಲ್ಲುವುದಕ್ಕಿಂತ ಗ್ರಂಥಾಲಯಗಳ ಮುಂದು ಸಾಲುಹಚ್ಚಿ ನಿಲ್ಲಬೇಕೆಂದಿದ್ದರು. ಶೋಷಿತ ಹಿಂದೂ ಹೆಣ್ಣುಮಕ್ಕಳ ಬಿಡುಗಡೆ ಶಿಕ್ಷಣದಿಂದ ಮಾತ್ರ ಸಾಧ್ಯವೆಂಬುದು ಅವರ ಧೋರಣೆಯಾಗಿತ್ತು. ಇಂದು ಎಷ್ಟು ಜನ ಇದನ್ನು ಸ್ಮರಿಸುತ್ತಾರೆ. ಎಷ್ಟು ಜನಕ್ಕೆ ಬಾಬಾಸಾಹೇಬರ ಈ ಬಡಿದಾಟದ ಒಳಗಿನ ಕಾಳಜಿ ಅರ್ಥವಾಗಿದೆ? ಇಂದೂ ಕೂಡಾ ಕತ್ತಿಯಂಚಿನ ದಾರಿಯಲ್ಲೇ ನಡೆಯುತ್ತಿರುವ ನಮ್ಮ ದೇಶದ ಮಹಿಳೆಯರೆಲ್ಲರೂ ಇದನ್ನು ಯೋಚಿಸಬೇಕು. ಹಾಗೆ ನೋಡಿದರೆ ಈ ದೇಶದ ಎಲ್ಲಾ ಬಗೆಯ ಶೋಷಣೆಗಳ ನಿಜವಾದ ವಿಮೋಚಕ ಅಂಬೇಡ್ಕರರೇ. *********

ಪ್ರಸ್ತುತ Read Post »

ಇತರೆ

ಪ್ರಸ್ತುತ

ಮಹಾನ್ ಮಾನವತಾವಾದಿ ಅಂಬೇಡ್ಕರ ರೇಷ್ಮಾ ಕಂದಕೂರ ನಮ್ಮ ದೇಶದ ಕಾನೂನು ವ್ಯವಸ್ಥೆಗೆ ಪ್ರತೀಕವಾಗಾರುವ ಲಿಖಿತ ದಾಖಲೆಯ ಹೊತ್ತಿಗೆ ಸಂವಿಧಾನ ಇದರ ರಚನೆಗೆ ಮಹತ್ವದ ಕೊಡುಗೆ ನೀಡಿದ ಮಹನೀಯ ಅಂಬೇಡ್ಕರ.ಸ್ವಾತಂತ್ರ್ಯ,ಸಮಾನತೆ,ಬಂಧುತ್ವದ ಆಧಾರವನ್ನು ಅಳವಡಿಸಿಕೊಂಡು ನಮ್ಮ ಸಂವಿಧಾನ ರಚಿತವಾಗಿದೆ. ನಮ್ಮ ಹಕ್ಕು,ಕರ್ತವ್ಯಗಳನ್ನು ತಿಳಿಸಿ ಶಾಸಕಾಂಗ,ಕಾರ್ಯಾಂಗ,ನ್ಯಾಯಾಂಗ ವ್ಯವಸ್ಥೆಗಳ ಅರಿವು ನೀಡುವ ವಿಶ್ವದಲ್ಲಿಯೇ ಬ್ರಹತ್ ಸಂವಿಧಾನ ಇಂಗ್ಲೆಂಡನ ಸಂವಿಧಾನ ಮಾದರಿಯನ್ನು ಅಳವಡಿಸಿ ಕೊಳ್ಳಲಾಯಿತು. ಅಂಬೇಡ್ಕರ ಬಾಲಕನಿದ್ದಾಗಲೇ ಪ್ರತಿಭಾವಂತ, ಕಲಿಯುವ ಹಂಬಲ,ಸೂಕ್ಷ್ಮತೆಯನ್ನು ಗುರುತಿಸಿ ಶಿಕ್ಷಕರ ಪ್ರೀತಿಗೆ ಪಾತ್ರರಾದರು.ಅಮೇರಿಕಾ,ಇಂಗ್ಲೆಂಡಿನಲ್ಲಿ ಉನ್ನತ ವ್ಯಾಸಂಗ ಮಾಡಿದರು.ಸಾಹು ಮಹಾರಾಜರಿಂದ ಶಿಷ್ಯವೇತನ ಪಡೆದರು . ಸಾಮಾಜಿಕ,ಆರ್ಥಿಕ ಪ್ರಗತಿಗಾಗಿ ನಿರಂತರ ಹೋರಾಟ ನಡೆಸಿದರು.ಭಾರತದ ನೀರಾವರಿ ಜನಕನೆಂದೆ ಹೇಳಬಹುದು ಪಂಡಿತ ನೆಹರುರವರ ಕಾಲದಲ್ಲಿನ ಮಂತ್ರಿಯಾಗಿದ್ದರು ಇವರನ್ನು ಮಂತ್ರಿ ಮಂಡಲದ ವಜ್ರ ಎಂದೇ ನೆಹರುರವರು ಪರಿಚಯಿಸುತ್ತಿದ್ದರು‌. ಹತ್ತನೇ ತರಗತಿಯಲ್ಲಿ ಮುಂಚೂಣಿಯಲ್ಲಿ ಪಾಸಾದಾಗ ಇವರಿಗೆ ಬಹುಮಾನವಾಗಿ ದೊರೆತ “ಬುದ್ಧನ ಚರಿತ್ರೆ” ಪುಸ್ತಕ ಮುಂದೆ ಬೌದ್ಧ ಧರ್ಮ ಸ್ವೀಕರಿಸಲು ಪ್ರೇರಣೆ ನೀಡಿತು.ಬುದ್ಧ,ಮಾರ್ಕ್ಸ ರ ಪ್ರಭಾವ ಇವರ ಅಪಾರ ಮೇಲೆ ಅಪಾರವಾಯಿತು.ಮನುಸ್ಮೃತಿಯಲ್ಲಿ ಅಸ್ಪೃಶ್ಯರನ್ನು ನಡೆಸಿಕೊಳ್ಳುತ್ತಿದ್ದ ರೀತಿಯನ್ನು ವಿರೋಧಿಸಿದರು‌.ಜಾತಿ ಆಧಾರಿತ ತಾರತಮ್ಯದ ವಿರುದ್ಧ ಧ್ವನಿ ಎತ್ತಿದರು. ಪ್ರಜಾ ಪ್ರಭುತ್ವದಲ್ಲಿ ಎದ್ದು ಕಾಣುವ ಸ್ಥೂಲ ಕಲ್ಪನೆಯ ವಿಭಿನ್ನ ಸಮಾಜವನ್ನು ಆದರ್ಶ ಸಮಾಜದ ಕಲ್ಪನೆ ಸುಖಿರಾಜ್ಯವನ್ನಾಗಿ ಬದಲಾಯಿಸಿ ಸ್ವಾತಂತ್ರ್ಯ,ಸಮಾನತೆ,ಭ್ರಾತೃತ್ವಗಳು ಒಟ್ಟಿಗೆ ಸಾಧಿಸುವುದನ್ನು ಕಲ್ಪಿಸಿದರು. ಇಂದಿನ ಸಮಾಜದಲ್ಲಿ ಒಂದು ಮನೋಭಾವ ಸಹವರ್ತಿಗಳಿಗೆ ಗೌರವ ಮತ್ತು ಸಮಾನತೆ ನೀಡುವುದು ಅವಶ್ಯಕ.ಪೆಡಸಾದ ಸಾಮಾಜಿಕ ಅಡೆತಡೆಗಳಿಂದ ಮುಕ್ತ ಸಮಾಜದ ನಿರ್ಮಾಣ ಅವಶ್ಯಕವಾಗಿದೆ. ಅಮರ ಚೇತನ ಮಹಾನ್ ಮಾನವತಾವಾದಿ ಶೋಷಿತರ ಏಳ್ಗೆಗಾಗಿ,ಸರ್ವ ಸಮಾನತೆಗಾಗಿ ಮೀಸಲಾತಿಯ ಅಧಿನಿಯಮ ಜಾರಿಗಾಗಿ ಶ್ರಮಿಸಿದರು.ಶ್ರಮಿಕರ ಕಣ್ಣೀರ ಒರೆಸುವಲ್ಲಿ.ದೇವರಿದ್ದಾನೆ ಎಂದು ತಿಳಿದ ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದವರು ಭಾರತದ ಸಂವಿಧಾನದ ಶಿಲ್ಪಿ ಅಂಬೇಡ್ಕರ. *******

ಪ್ರಸ್ತುತ Read Post »

ಇತರೆ

ಪ್ರಸ್ತುತ

ದಲಿತ ಸೂರ್ಯ ದಲಿತ ಸೂರ್ಯ..ವಿಶ್ವಮಾನವ… ಜೈಭೀಮ….!              ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ.” …………….ಡಾ!!ಬಿ.ಆರ್ ಅಂಬೇಡ್ಕರ್ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ವ್ಯಕ್ತಿತ್ವವಾಗಿ ಪರಿವರ್ತನೆಗೊಳ್ಳುವ ಸಮಯ ಬಹು ಕಷ್ಟದ್ದು.ಜೀವನದ ಪ್ರತಿಕ್ಷಣದಲ್ಲೂ ಏಳುಬೀಳುಗಳನ್ನು ಕಂಡು,ನೋವಿನ ಅಗ್ನಿ ಕುಂಡದಲ್ಲಿ ಬೆಂದರೂ,ಪುಟಕ್ಕಿಟ್ಟ ಚಿನ್ನದಂತೆ ಪ್ರಖರವಾದ ಪ್ರಕಾಶ ಹೊರಹೊಮ್ಮಿಸುತ್ತಿರುವುದು ಪ್ರತಿಭೆಯ ಆಗರದ ಪ್ರತಿಮೆಯೆಂದರೆ ತಪ್ಪಾಗದು.ಇಂದು ನಾವೆಲ್ಲ ಭವ್ಯ ಭಾರತದ ಶ್ರೇಷ್ಠ ನಾಯಕರಲ್ಲಿ ಅಗ್ರಸ್ಥಾನದಲ್ಲಿ  ಶ್ರೀ ಜಗಜ್ಯೋತಿ ಬಸವಣ್ಣನವರು  ಶ್ರೀ ಮಹಾತ್ಮಗಾಂಧೀಜಿ, ಡಾ!!ಬಿ.ಆರ್.ಅಂಬೇಡ್ಕರ್….ತ್ರಿಮೂರ್ತಿಗಳು ….ದೇಶ ವಿದೇಶಗಳಲ್ಲಿ ಈ ಮಹಾತ್ಮರ ಪ್ರತಿಮೆಗಳು,ವಿಶ್ವ ಇವರನ್ನು  ಗೌರವಿಸಿ,ಅವರ ಆದರ್ಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವತ್ತ ಜಗತ್ತು ಸಾಗುತ್ತಿದೆ……ಅದು ಹೆಮ್ಮೆಯ ಸಂಗತಿ.ಲಿಖಿತ ಸಂವಿಧಾನದ ಕೊಡುಗೆ ಇಡೀ ಪ್ರಪಂಚಕ್ಕೆ ಭಾರತದ ಹೆಜ್ಜೆಗಳು ಪಕ್ಕಾ ಹಾಗೂ ಶಾಶ್ವತವಾದ ಭದ್ರ ಬುನಾದಿ, ಎಲ್ಲರೂ ಸಂವಿಧಾನಕ್ಕೆ ಕಾಯಾ ವಾಚಾ ಸಮಾನರು ಎಂಬ ಸಂದೇಶವನ್ನು ಜಗತ್ತಿಗೆ ಮಾದರಿ ನೀಡಿದ ಮಹಾನುಭಾವ, “ಜ್ಞಾನಿಗಳು ಪುಸ್ತಕಗಳನ್ನು ಪೂಜಿಸಿದರೆ, ಅಜ್ಞಾನಿಗಳು ಕಲ್ಲನ್ನು ಪೂಜಿಸುತ್ತಾರೆ”……  ಎಂಬ ಜೈಭೀಮರವರ ಮಾತು ಇಂದಿಗೂ ಪ್ರಸ್ತುತ ಎಂದರೆ ಅಲ್ಲಗಳೆಯುವಂತಿಲ್ಲ. … ಭರತಖಂಡದಲ್ಲಿ ಇಂತಹ ಅಭೂತಪೂರ್ವ ಮಾಣಿಕ್ಯ ಜನಿಸಿದ್ದು.. ಏಪ್ರಿಲ್ ೧೪, ೧೮೯೧ ರಂದು ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ನಲ್ಲಿ ಜನಿಸಿದರು.ಇವರು ಮೂಲತಃ ಮಹಾರಾಷ್ಟ್ರದ ರತ್ನಗಿರಿಯ ಖೇಡಾ ತಾಲೂಕಿನ ಅಂಬೆವಾಡ ಗ್ರಾಮದವರು.ಇವರು ಮಹಾರ್ ಜಾತಿಯಲ್ಲಿ ಹುಟ್ಟಿದರು.ಇವರಜ್ಜ ಮಾಲೋಜಿ ಸಕ್ವಾಲ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬೊಂಬೆ ಸೇನೆಯಲ್ಲಿ ಹವಾಲ್ದಾರ್ ರಾಗಿ ನಿವೃತ್ತಿ ಹೊಂದಿದವರು. ಆ ಕಾಲದಲ್ಲಿಯೇ ಇವರು ೧೯ ಮೆಡಲ್ಗಳನ್ನು ಗಳಿಸಿದ್ದರು. ಮಗ ರಾಮಜೀ ಸಕ್ವಾಲ ಸೊಸೆ ಭೀಮಾಬಾಯಿಯ ೧೪ನೆಯ ಪುತ್ರರಾಗಿ ಭೀಮ ಜನಿಸಿದ್ದು …ಜಗತ್ತನ್ನು ಹೊಸಚಿಂತನೆಗೆ ದಾರಿ ತೋರುವ ನವ ಭಾಸ್ಕರ ಉದಯಿಸಿದಂತೆ  ನಭದಲ್ಲಿ ನಕ್ಷತ್ರಗಳು ಹೊಳಪನ್ನೆಲ್ಲ ಈ ಬಾಲಕನಲ್ಲಿ ತುಂಬಿದಂತೆ ಕಾಣಿತಿತ್ತು.ಕಾಣುವ ಕಂಗಳಿಗೆ ಮಾತ್ರ‌..!ತಂದೆ ಮಿಲಿಟರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಾ…ಭೀಮನಲ್ಲಿ ದೇಶ ಪ್ರೇಮ,ಭಕ್ತಿ,ಧರ್ಮ,ಜ್ಞಾನದ ಬೆಳಕನ್ನು ಬಿತ್ತುವ ಕಾರ್ಯ ಮಾಡುತ್ತಿದ್ದರು.ತಾಯಿ ಭೀಮಾಬಾಯಿ ಕರುಣೆಯ ಸಾರ ಉಣಿಸುವಾಗಲೇ ಕಣ್ಮರೆಯಾದರು…ಆ ಪ್ರೀತಿಯನ್ನು ಸೋದರತ್ತೆ ಮೀರಾ ಉಣಿಸಿ ಬೆಳೆಸುತ್ತಿದ್ದಳು. ಜಾತಿ ಭೇದ ಮೇಲುಕೀಳು ಬಡವ ಶ್ರೀಮಂತ ಎನುವ ಅಸಮಾನತೆ ತುಂಬಿರುವ ಈ ಸಮಾಜವ ನಾಗರಿಕ ಎಂದು ನಾ ಹೇಗೆ ಹೇಳಲಿ?? ನಾಚಿಕೆ ತುಂಬಾ ನಾಚಿಕೆ ನಾಗರಿಕತೆ ಎನುವ ಪದಕೆ ನಾಚಿಕೆ………. ಈ ಮೇಲಿನ ಸಾಲುಗಳು ಎನ್ನೆದೆಯಲ್ಲಿ ಇನ್ನು ಮುಳ್ಳು ಮುರಿದಂತೆ ಭಾಸವಾಗುತ್ತದೆ……ಎಂತಹ ಅಗಾಧ ಶಕ್ತಿ, ಪ್ರತಿಭೆಗಳಿದ್ದರೂ…….ಅಡ್ಡಗೋಡೆ ಜಾತಿ *ಮಹಾರ್ನಾವೆಷ್ಷೇ ಸಮಾಜದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದರೂ…ಪ್ರಗತಿ ಸಾಧಿಸಿದರೂ ನಮ್ಮ ನಿಲುವುಗಳು ಮಾತ್ರ ಭಿನ್ನವಾಗಿಲ್ಲ…….ದಲಿತ,ಅಸ್ಪೃಶ್ಯತೆ ನುಡಿಯೇ,ಪದವೇ ಮೆಟ್ಟಿ ತುಳಿದು ನಿಲ್ಲುವಂತಹುದು.. ಇಂತಹ  ಸನ್ನಿವೇಶ  ಪ್ರತಿ ಹಂತದಲ್ಲೂ ಬಾಲ್ಯದ ಜೀವನ ಹಾಗೂ ಬದುಕಿನುದ್ದಗಲಕ್ಕೂ ಈ ಹಿಂಸೆಯನ್ನು      ಅನುಭವಿಸಿದ್ದರು….ಅದೊಂದು ಚಮತ್ಕಾರ ಇವರ ಜೀವನದಲ್ಲಿ  ಎಲ್ಲ ಶಿಕ್ಷಕರಿಗೂ,ಸಹಪಾಠಿಗಳಿಗೂ ಭೀಮ ಕೀಳುಜಾತಿಯವನಾಗಿದ್ದರೂ,ತರಗತಿಯ ಮೂಲೆ,ಬಾಗಿಲ ಬಳಿ ತಟ್ಟನ್ನು ಹಾಸಿ ಕುಳಿತು ಕಲಿಯುವಾಗ ದೃತಿಗೆಡಲಿಲ್ಲ..! ಆ ಸಂಧರ್ಭದಲ್ಲಿ ಅವನ ಗುರುಗಳಾದ #ಶ್ರೀ ಫೆಂಡಸೇ ಅಂಬೇಡ್ಕರ್# ದಲಿತ ಮಗುವೆಂದು ತಿಳಿದರೂ,ತನ್ನ ಮನೆಯಿಂದ ತಂದ ಊಟದಲ್ಲೆ ಊಟ ಮಾಡಿಸುತ್ತಿದ್ದ.ಕುಲದಲ್ಲಿ ಬ್ರಾಹ್ಮಣ ರಾದರೂ ಭೀಮನ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿದ್ದರು.ಭೀಮನ ಹಾಜರಿಯಲ್ಲಿ ಭೀಮರಾವ್ ರಾಮಜೀ ಅಂಬೆವಾಡ್ಕರ ಎಂಬುದನ್ನು ತಿದ್ದಿ *ಭೀಮರಾವ್ ಅಂಬೇಡ್ಕರ್ ಆದುದು.. . ಸತ್ಯ…ಇಂತಹ ಶಿಕ್ಷಕರು ಎಲೆಮರೆಯ ಭಾಗವಾಗಿ ಮರೆಯಾಗುತ್ತಾರೆ.ಮುಂದೊಂದು ದಿನ ಈ ಭೀಮ ಜಗತ್ತಿಗೆ ** ಜೈಭೀಮನಾಗುವನೆಂಬ ಭವಿಷ್ಯ ಕಂಡಂತಿತ್ತು… ವಿಧ್ಯೆ ಯಾರ ಸೊತ್ತಲ್ಲ…ಅದು ಒಲಿಯುವುದು ಸಾಧನೆಯ ಮೆಟ್ಟಿಲನ್ನು ಹತ್ತಲು ಛಲ ಹೊಂದಿದವರಿಗೆ. ಎಡಬಿಡದೇ ಸಂಘರ್ಷಗಳ ನಡುವೆ…ಹತಾಶೆಯ ಕೂಪದಲ್ಲಿ ಮಿಂದರೂ ಕಮಲದಂತೆ ಪರಿಶುದ್ಧ… ಜೈಭೀಮ…! ಓದುವುದರಲ್ಲಿ ನಿಸ್ಸೀಮ.! ಅಂಧಕಾರದ ಕರಿ ನೆರಳಲ್ಲಿ ಜ್ಯೋತಿಯಂತೆ ಬೆಳಗಲು ಬಂದನಿಲ್ಲಿ.. ಮೌಡ್ಯತೆಗಳ ಮೋಡಗಳ ಕರಗಿಸಲು ಪಣ ತೊಟ್ಟನಿಲ್ಲಿ….. ಭೀಮರಾವ್…ಗಳಿಸಿರುವ ಪದವಿಗಳ ಸಾಲು  ನೆನೆದರೇನೆ…ಮನತುಂಬಿ ಬರುತ್ತದೆ… ಹತ್ತನೇ ತರಗತಿ ಮುಗಿದಿದ್ದೇ ತಡ ಭೀಮನಿಗೆ ಕಂಕಣ ಬಲ ಕೂಡಿ ಬಂದಿತ್ತು.. ಡಾಪೋಲಿಯಾ ಬಿಕ್ಕು ವಾಲಂಗಕರ್  ರವರ ಪುತ್ರಿ ರಮಾಬಾಯಿಯವರೊಂದಿಗೆ ನೆರವೇರುತ್ತೆ….ಜ್ಞಾನ ದಾಹದ ಝರಿ ಕಡಲನ್ನು ಸೇರಲು ಹಾತೊರೆಯುತ್ತಿತ್ತು..ಅದಕ್ಕೆ ಕೈಜೋಡಿಸಿದವರು..ಕೆ.ಎ.ಕೇಲಸ್ಕರವರು ..ಬರೋಡಾ ಮಹಾರಾಜರಿಂದ ತಿಂಗಳಿಗೆ ೨೫ ರೂಪಾಯಿ ಶಿಕ್ಷಣ ವೇತನ ನಿಗದಿ ಪಡಿಸಿ ಪಿ.ಯು.ಸಿ, ಬಿ.ಎ. ಶಿಕ್ಷಣಕ್ಕೆ,ಉನ್ನತ ವ್ಯಾಸಂಗಕ್ಕೆ ಅಮೇರಿಕಾ ಕೊಲಂಬಿಯಾ ವಿಶ್ವವಿದ್ಯಾಲಯ ದಲ್ಲಿ,ಅರ್ಥಶಾಸ್ತ್ರ, ಸಮಾಜಶಾಸ್ತ್ರ,ಇತಿಹಾಸ,ತರ್ಕಶಾಸ್ತ್ರ, ರಾಜ್ಯಶಾಸ್ತ್ರದಲ್ಲಿ ಅಧ್ಯಯನ, ಪಿ.ಎಚ್.ಡಿ.ಅಲ್ಲದೆ ಅಮೇರಿಕಾ,ಇಂಗ್ಲೆಂಡ್ ಗ್ರೇಸ್ ಇನ್ ಕಾಲೇಜನಲ್ಲಿ ಕಾನೂನು ಪದವಿ,ಲಂಡನ್ ದಲ್ಲಿ ಎಮ್.ಎಸ್.ಇ,ಹಾಗೂ ಡಿ.ಎಸ್ಸಿ,ಪಡೆಯಲು ಪ್ರೋತ್ಸಾಹ ನೀಡುವರು ಹಾಗೂ ಸ್ನೇಹಿತರು,ಸ್ವಯಂ ದುಡಿಮೆಯಿಂದ ಪೂರೈಸಿಕೊಂಡು,ತಾಯ್ನಾಡಿಗೆ ಮರಳಿದರು.ಒಪ್ಪಂದದಂತೆ ಬರೋಡಾಮಹಾರಾಜರ ಆಸ್ಥಾನದಲ್ಲಿ ಕಾರ್ಯರ್ಶಿಯಾಗಿ ನೇಮಕವಾದರು…. ಮಹಾರಾಜರಲ್ಲಿ ಪ್ರಜೆಗಳೆಲ್ಲ ಒಂದೆಂಬ ಭಾವನೆಯಿದ್ದರೂ ಅವರ ಅರಿವಿಗೆ ಬಾರದಂತೆ ಭೀಮರಾವ್ ರವರ ಫೈಲುಗಳನ್ನು ಆಸ್ಥಾನದ ಸಿಪಾಯಿ ಕೂಡ ಮುಟ್ಟುತ್ತಿರಲಿಲ್ಲ..ಅಲ್ಲದೆ ಉಳಿದುಕೊಳ್ಳಲು ಆಸ್ಥಾನದಲ್ಲಿ ನಿವೇಶನವನ್ನು ನೀಡದೇ ಪಾರ್ಸಿ ಹೋಟೆಲ್ ನಿಂದ ಹೊರದಬ್ಬಿದರು…. …ಅಸಾಮಾನ್ಯ ವಿದ್ಯಾವಂತ ದೇಶದ ಹೆಮ್ಮೆಯ ಪುತ್ರ ಇವರ ಕಣ್ಣಿಗೆ ಕೇವಲ ಮಾಹರ ಜಾತಿಯ ಭೀಮ ಕಂಡ.  ಬಿಟ್ಟರೆ ಬೇರೇನೂ ಕಾಣಲಿಲ್ಲ…. ಅಂಬೇಡ್ಕರ್ ರ ಉದ್ದೇಶ ಸ್ಪಷ್ಟವಾಗಿತ್ತು..ವಕೀಲ ವೃತ್ತಿ ಪ್ರಾರಂಭಿಸುತ್ತಾ..ಸಾಮಾಜಿಕ ಕಾಳಜಿಯುಳ್ಳ ಇವರು ೧೯೨೭ರಲ್ಲಿ ದಲಿತ ವರ್ಗದವರನ್ನು ಜಾಗೃತವಾಗಿ ಮಾಡಲುಬಹಿಷ್ಕೃತ ಭಾರತ* ಪತ್ರಿಕೆಯ ಮೂಲಕ,ಹಾಗೂ ೧೯೨೦ರಲ್ಲೆ ಮುಖ ನಾಯಕಪತ್ರಿಕೆ ಪ್ರಕಟಿಸಿದ್ದು ಮರೆಯುವಂತಿಲ್ಲ.. ಮಹಾಡದ ಚೌಡದ ಕೆರೆಯ ನೀರನ್ನು ಮುಟ್ಟುವ ಚಳುವಳಿ,೧೯೩೦ರಲ್ಲಿ ಹದಿನೈದು ಸಾವಿರ ಅನುಯಾಯಿಗಳೊಂದಿಗೆ ನಾಸಿಕ ಕಾಳರಾಂ ದೇವಾಲಯದ ಪ್ರವೇಶ ಚಳುವಳಿ….ಹೀಗೆ   ಭೀಮ ದಲಿತರ ಧ್ವನಿಯಗುವುದರೊಂದಿಗೆ….೧೯೩೦-೩೨ ರವರೆಗೆ ಲಂಡನ್ನಿನಲ್ಲಿ ನಡೆದ ದುಂಡುಮೇಜಿನ ಸಮ್ಮೇಳನದಲ್ಲಿ ದಲಿತರ ಪ್ರತಿನಿಧಿಯಾಗಿ ಭಾಗವಹಿಸಿ ದಲಿತರಿಗೆ ಪ್ರತ್ಯೇಕ ಮತದಾನದ ಸೌಲಭ್ಯ ಕಲ್ಪಿಸಿಕೊಟ್ಟ ಧೀಮಂತ ನಾಯಕ ಭೀಮ.ಮತದಾನ ನಮ್ಮ ಹಕ್ಕೆಂದು ಮನವರಿಕೆ ಮಾಡಿಕೊಟ್ಟವ.ಇಂಗ್ಲೆಂಡ್ ಪ್ರಧಾನಿ ವ್ಯಾಕಡೋನಾಲ್ಡ್ ನೀಡಿದ ಕೋಮು ಆದೇಶವನ್ನು ತೀರ್ಪನ್ನು ಮಹಾತ್ಮ ಗಾಂಧಿಯವರು ಇಡೀ ಹಿಂದು ಧರ್ಮ ಒಡೆದು ಹೋಗುತ್ತದೆಂದು ವಿರೋಧಿಸಿ…ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು. ನಂತರ ಅಂಬೇಡ್ಕರ್ ಮತ್ತು ಗಾಂಧೀಜಿಯವರ ನಡುವೆ ಒಪ್ಪಂದ. ೧೯೩೨ ರಲ್ಲಿ.ಪ್ರತ್ಯೇಕ ಮತದಾನ ತ್ಯಜಿಸಿ ಜಂಟಿ ಮತದಾನ ಸೀಟುಗಳ ಸಂಖ್ಯೆ ೧೪೮ ನೀಡಿದರು. ಇದನ್ನು ಪೂನಾ*ಒಪ್ಪಂದವೆಂದು ಕರೆಯಲಾಯಿತು. ಅಸ್ಪೃಶ್ಯತೆ ನಿವಾರಣೆಗಾಗಿ ,ಅವರ ಆರ್ಥಿಕ ಪ್ರಗತಿಗಾಗಿ ನಿರಂತರವಾದ ಹೋರಾಟ ಬ್ರಿಟಿಷ್ ಹಾಗೂ ವರ್ಣ ವ್ಯವಸ್ಥೆಯ ವಿರುಧ್ದ ನಡೆಸಿದರು.ಅಲ್ಲದೇ ಮನಸ್ಸು ರೋಸಿಹೋಗಿತ್ತು… ೧೯೩೫. ಅಂಬೇಡ್ಕರ್ ರವರು* ಯೌಲ್ ಸಮ್ಮೇಳನದಲ್ಲಿ “ನಾನು ಹಿಂದೂ ಧರ್ಮ ದಲ್ಲಿ ಇರುವುದಿಲ್ಲ,ನಾನು ಹಿಂದೂವಾಗಿ ಹುಟ್ಟಿದ್ದು ಅನಿಶ್ಚಿತವಾಗಿ,ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂಬ ಪ್ರತಿಜ್ಞೆ ಮಾಡುತ್ತಾರೆ” ಎಂದ ಮೇಲೆ ಅವರು ಅನುಭವಿಸಿದ ನೋವು ಇಂದು ಸಹ ಅನುಭವಿಸುತ್ತಿರುವುದು ವಿಪರ್ಯಾಸ…!! ಬದಲಾಗದ ಸಾಂಪ್ರದಾಯಿಕ ಮೌಢ್ಯ ಕಟ್ಟುಪಾಡುಗಳು.,.. ೧೯೩೬ರಲ್ಲಿ  *ಇಂಡಿಪೆಂಡೆಂಟ್ ಲೇಬರ್ ಪಾರ್ಟಿ*ಸ್ಥಾಪಿಸಿ ಹದಿನೈದು ಅಭ್ಯರ್ಥಿಗಳು ಗೆಲ್ಲುವಂತೆ ಮಾಡಿ,ದಲಿತರಿಗೆ ಶಿಕ್ಷಣ ಅತೀ ಅವಶ್ಯವೆಂದು ಮನಗಂಡು ೧೯೪೬ ರಲ್ಲಿ ಫಿಲಿಪ್ಸ್ ಎಜುಕೇಶನ್ ಇನ್ಸ್ಟಿಟ್ಯೂಷನ್ ಪ್ರಾರಂಭಿಸಿದರು…. *ದಲಿತ ಸೂರ್ಯ ನಿನಗಿದೋ ನಮನ ಭೀಮರಾಯ ನಿನಗಿದೋ ನಮನ……ಎಂಬ ಸಾಲುಗಳು ಅರಿವಿಲ್ಲದೆ   ಮನದ ಮೂಲೆಯಲ್ಲಿ ಗುಣುಗುಟ್ಟಿದ್ದಂತೂ ಸತ್ಯ…ವೇದಗಳು‌ ಸಾರುವ ಮೂಲತತ್ವದ ಬೇರ ಅರಿಯಬೇಕಿದೆ…೧೯೪೬ ರಲ್ಲಿ ಸಂವಿಧಾನ ರಚನಾ ಸಭೆಗೆ ಬಂಗಾಳ ಪ್ರಾಂತ್ಯದಿಂದ ಆಯ್ಕೆಯಾಗಿ ೧೯೪೭ರಲ್ಲಿ ಕರಡು ಸಮಿತಿಯ ಅಧ್ಯಕ್ಷರಾಗಿ ಮೂರು ವರ್ಷ ಹಗಲೆನ್ನದೇ ರಾತ್ರಿಯೆನ್ನದೇ ಸಂವಿಧಾನ ಬರೆದು ೧೯೫೦ ರಲ್ಲಿ ಭಾರತ ಮಾತೆಗೆ ತಮ್ಮ ಕರ್ತವ್ಯದ ಋಣ ಅರ್ಪಿಸಿದರು…ಪ್ರಜೆಗಳು ನ್ಯಾಯ ಸಮ್ಮತ ವಿಧೇಯಕ ಗಳು ದೇಶದ ಭವಿಷ್ಯ ಸುಭದ್ರಗೊಳಿಸುವುದಾಗಿದೆ. ದೇಶಭಕ್ತ ಜಾತಿ ಧರ್ಮ ಎಂದೆಣಿಸದೇ ನ್ಯಾಯ ನೀಡಿರುವುದು ನಮ್ಮ ಹೆಮ್ಮೆ.. .ನಮ್ಮ ದೇಶ ಲಿಖಿತ ಸಂವಿಧಾನದ ಹೊಂದಿದ ರಾಷ್ಟ್ರವೆಂಬ ಹೆಮ್ಮೆಗೆ ಕಾರಣವಾಗಲು ಅದ್ವಿತೀಯ ಅಸಾಮಾನ್ಯ ಸರಸ್ವತಿ ಪುತ್ರ ವಿದ್ಯಾ ಆರಾಧಕ…ಭೀಮರಾವ್ ಅಂಬೇಡ್ಕರ್….. ಇಂತಹ ಸಾಧನೆಗೆ ೧೯೫೦ರಲ್ಲಿ  ಅಮೆರಿಕಾ ಕೊಲಂಬಿಯಾ ವಿಶ್ವವಿದ್ಯಾಲಯ ಇವರನ್ನು ಸಂವಿಧಾನ ಶಿಲ್ಪಿಆಧುನಿಕ ಭಾರತದ ನಿರ್ಮಾತೃಎಂದು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದ್ದು,ಆಂದ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯ ಇವರನ್ನು *ಡಾಕ್ಟರ್ ಆಫ್ ಲಿಟರೇಚರ್*ಎಂದು ಗೌರವಿಸಿರುವುದು..ಹೆಮ್ಮೆ… ನಿನ್ನ ಹೆತ್ತ ಭಾರತಾಂಭೆ ಪುಣ್ಯವಂತಳೋ *ಹುಟ್ಟಿ ಬಂದೆ ಕೋಟಿಜನರ ನೋವಿನೊಳಗೆ ನೀನು ಕಷ್ಟ ಕೊಟ್ಟರು ಘಾಟಿ ಜನರು ಗೆದ್ದು ಬಂದೆ ನೀನು ಪುಣ್ಯ ಪುರುಷ ನೀನು,ಏಕಲವ್ಯ ನೀನು ಮುಂದೆ ಸಾಗಲಿ ನಿನ್ನ ರಥವು ಇಂದು ನಾವು ಇವರ ಬಗ್ಗೆ ಅಧ್ಯಯನ ಮಾತ್ರ ಮಾಡದೇ…ಅದರ ಹಿಂದಿರುವ ಶಕ್ತಿ ಯನ್ನು ಗುರುತಿಸಿ ನಮ್ಮೊಳಗೊಬ್ಬ ಭೀಮ ಹುಟ್ಟು ವಂತೆ ಮಾಡಬೇಕಾದುದು ಅನಿವಾರ್ಯ……ಜಾತಿಗಳು,ಧರ್ಮಗಳು ಮನುಷ್ಯನ ಅಸ್ಥಿತ್ವದಲ್ಲಿರುವ ವಿಷಬೀಜಗಳು….ಅವನ್ನು ಕಿತ್ತೊಗೆಯದೇ ಮನುಷ್ಯನಲ್ಲಿ ಮಾನವೀಯ ಗುಣಗಳು ಬೇರೂರುವ ಸಮಯ ಇಡೀ ವಿಶ್ವವೇ ಕಾದು ಕುಳಿತಂತಿದೆ.. ಅಂಬೇಡ್ಕರ್ ರವರು ಪಾರ್ಲಿಮೆಂಟ್ ನಲ್ಲಿ  ಹಿಂದೂ ತಂದ ಕೋಡ್ ಬಿಲ್.. ದೇಶದ  ಮಹಿಳಾ ವಿಮೋಚನೆಯನ್ನು ಮನುಸ್ಮೃತಿ ಯ ಮೂಲಕ ಶೋಷಿತ ಮಹಿಳೆಯರ ಬಿಡುಗಡೆಗೊಳಿಸಲು .ಮತ್ತು.. ಸಮಾನ ಹಕ್ಕನ್ನು ನೀಡಲು ಮಂಡಿಸಿದರು.ಆದರೆ ಇವರ ಈ ಬಿಲ್ಲನ್ನು… ಸಂಪ್ರದಾಯದಿಂದ ಕೂಡಿದ ಪಾರ್ಲಿಮೆಂಟ್ ಸಭೆ “ಹಿಂದೂ ಕೋಡ್ ನ್ನು” ನಿರಾಕರಿಸಿತು.ಮನನೊಂದ ಅಂಬೇಡ್ಕರ್ ರವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದರು….ನಂತರದ ದಿನಗಳಲ್ಲಿ ಬೌದ್ಧಧರ್ಮದ‌ ಆಚಾರ ಹಾಗೂ ಪ್ರಚಾರಕ್ಕಾಗಿ ಜೀವನವನ್ನು ಅರ್ಪಿಸಿಕೊಂಡರು…೧೯೫೫ರಲ್ಲಿ ಭಾರತೀಯ ಬೌದ್ಧ ಮಹಾಸಭೆ ಸ್ಥಾಪಿಸಿದರು. ೧೯೫೬ ಅಕ್ಟೋಬರ್ ೧೪ ರಂದು ೫ ಲಕ್ಷ ಅನುಯಾಯಿಗಳೊಂದಿಗೆ ಪತ್ನಿ ಸವಿತಾ ಅಂಬೇಡ್ಕರ್ ಜೊತೆ ನಾಗ ಜನತೆಯ ಮೂಲ ನಾಡಾದ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿ…ನಾನು ಹಿಂದುವಾಗಿ  ಸಾಯಲಾರೆ ಎಂಬ ಪ್ರತಿಜ್ಞೆಯನ್ನು ಪೂರ್ಣಗೊಳಿಸಿದರು….ಬರ್ಮಾದ ಬೌದ್ಧ ಬಂತೆ,ವೀರ ಚಂದ್ರಮಣಿ ಬೌದ್ಧಧೀಕ್ಷೆ ನೀಡಿದರು    ಡಿಸೆಂಬರ್ ೬ ,೧೯೫೬ರಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ  ನಿಧನರಾದರು..ಬಾಬಾ ಸಾಹೇಬ್ ಅಂಬೇಡ್ಕರ್ ರವರ ಕೃತಿಗಳು ೮ ಭಾರತದಲ್ಲಿ ಜಾತಿಪದ್ದತಿ,ಸ್ವತಂತ್ರ ಕಾರ್ಮಿಕ ವರ್ಗದ ಸಂವಿಧಾನಾತ್ಮಕ ನಿಯಮ.ಇತ್ಯಾದಿ…….ವಿಶ್ವದ ದೇಶಗಳು ಇಂದಿಗೂ ಅಂಬೇಡ್ಕರ್ ರ ಜೀವನ ಚರಿತ್ರೆಯಿಂದ ಯಶಸ್ಸಿನ ಮುನ್ನುಡಿ ಬರೆಯುತ್ತಿವೆ..   ವಿಶ್ವಮಾನವ *ಸಂದೇಶದ ಮೂಲಪುರುಷನನ್ನು.ತಮ್ಮ ಯು ಎಸ್ ಎ.ತಮ್ಮ ಗ್ರಂಥಾಲಯಕ್ಕೆ ಅಂಬೇಡ್ಕರ್ ಪುತ್ಥಳಿಯಿರಿಸಿ ಗೌರವಿಸಿವೆ…….ದೀಪದ ಬುಡಕ್ಕೆ ಕತ್ತಲು ಎಂಬಂತೆ ನಮ್ಮ ದೇಶದ ಜನತೆ ಈ ಮಹಾನ್ ವ್ಯಕ್ತಿಯ ವ್ಯಕ್ತಿತ್ವದ ಅನಾವರಣ ಮಾಡಲು ತಾಕತ್ತು,ಸಂಯಮ,ಛಲ ತಮ್ಮದಾಗಿಸಿಕೊಳ್ಳಲು ಶ್ರಮಪಡಬೇಕಿದೆ…. ಭಾರತರತ್ನ **ಪ್ರಶಸ್ತಿ ಲಭಿಸಿದರೂ ನಮ್ಮೊಳಗಿನ ಮೌಡ್ಯತೆ ಬೇರುಸಹಿತ ಕಿತ್ತುವ ತನಕ ಎಲ್ಲರೂ ನಮ್ಮವರು,ನಮ್ಮಂತೆ ಇರುವವರೆಂಬ ಭಾವ ಗಟ್ಟಿಯಾಗಿ ನೆಲೆನಿಲ್ಲುವ ತನಕ ಸಾಧಕರ ಸಾಧನೆಗೆ ಬೆಲೆ ಬರಲಾರದು….ಡಾ!!ಬಿ.ಆರ್.ಅಂಬೇಡ್ಕರ್ ಮಾನವತಾವಾದಿ ಭಾರತರತ್ನ ಅಂಬೇಡ್ಕರ್ ಧ್ವನಿಯ ನೀಡಿದ ಮೂಕ ನಾಯಕ ನಿನಗಿದೋ ವಂದನೆ ಬುದ್ದ, ಬಸವ ಕರುಣಿಸಿದ ವರಪ್ರಸಾದ.. ಬಹುಜನನಾಯಕ ಜಯ ಜೈ ಭೀಮ ಅಮರಗೊಳಿಸುವೆವು ನಿನ ನಾಮ ನಿನ್ನ ತತ್ವದಲಿ ಮುನ್ನಡೆವೆವು ಜೈಭೀಮ…… ನಮ್ಮೆದೆಯ ಗೂಡಲಿ ಬಂದೂಕುಗಳು ಮೊಳಗದಿರಲಿ…ಪ್ರೀತಿ ನಗೆಯ ಮಲ್ಲಿಗೆ ಅರಳಲಿ….ವಿಶ್ವ ನಾಯಕನ ದಿನದಿಂದಾದರೂ ನಾವೆಲ್ಲ ಮನುಕುಲದ ಉಳಿವಿಗೆ ಒಗ್ಗಟ್ಟಿನಿಂದ ಬದುಕ ನಡೆಸುವ ಶಪಥ ಮಾಡೋಣ…ಪ್ರತಿ ಮನೆಯಲ್ಲಿ ಛಲವಿರುವ,ಗುರಿಯಿರುವ  ಜೈಭೀಮನಂತವರು ಜಾತಿ,ಧರ್ಮ,ಅಂಧಾನುಕರಣೆ ಮೆಟ್ಟಿನಿಲ್ಲುವ ಪುತ್ರರು ಜನಿಸಲಿ….ಭಾರತಾಂಬೆಯ ಕೀರ್ತಿ ಬೆಳಗಿಸುವಂತಾಗಲಿ.     ಮಸ್ತಕದಲಿ ಪುಸ್ತಕ ಅರಳುವಂತೆ ಮಾಡೋಣವೆಂದು  ….ಮತ್ತೊಮ್ಮೆ ಭವ್ಯ ಚೇತನ ದಿವ್ಯಾನಿಭೂತಿಯ ಬೌದ್ಧ ಅನುಯಾಯಿಗೆ ಶಿರ ಸಾಷ್ಟಾಂಗ ನಮನಗಳು…ಜೈಭೀಮ…. ******* ಶಿವಲೀಲಾ ಹುಣಸಗಿ

ಪ್ರಸ್ತುತ Read Post »

ಇತರೆ

ಪ್ರಸ್ತುತ

ಡಾ.ಬಿ.ಆರ್.ಅಂಬೇಡ್ಕರ್..! ಎಲ್ಲಾ ಜನಾಂಗೀಯ ನಾಯಕ ಮತ್ತು ಸರ್ವರ ಅದರಲ್ಲೂ ದಲಿತರ ಏಳಿಗೆಗಾಗಿ ದುಡಿದ ಡಾ.ಬಿ.ಆರ್.ಅಂಬೇಡ್ಕರ್..! ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ. ಆ ನಿಮಿತ್ತವಾಗಿ ಈ ಪುಟ್ಟ ಲೇಖನ… ಅಂದು ಆ ಬಾಲಕ ಅಸ್ಪೃಶ್ಯತೆ, ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಇವತ್ತು ಈ ಅಖಂಡ ಭಾರತದಲ್ಲಿ ಮರೆಯಲಾರದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲವೇನೋ? ಆ ಬಾಲಕ ಯಾರೆಂದು ಕ್ಷಣಮಾತ್ರದಲ್ಲಿ ಊಹಿಸಬಹುದು. ಅದೇ ಡಾ. ಬಿ.ಆರ್. ಅಂಬೇಡ್ಕರ್. ಈ ಹೆಸರು ಹೇಳುತ್ತಿದ್ದಂತೆಯೇ ಮೈ ರೋಮಾಂಚನಗೊಳ್ಳುತ್ತದೆ… ಭೀಮರಾವ್ ರಾಮ್‍ಜಿ ಅಂಬೇಡ್ಕರ್ ಅವರು ಬಾಲ್ಯದಲ್ಲಿ ಅನುಭವಿಸಿದ ನೋವುಗಳು ಒಂದೇ-ಎರಡೇ? ಅದನ್ನು ಹೇಳುತ್ತಾ ಹೋದರೆ ನಿಜಕ್ಕೂ ಮನಸ್ಸಿಗೆ ನೋವಾಗುತ್ತದೆ… ಆಗಿನ್ನೂ ಅಂಬೇಡ್ಕರ್ ಅವರಿಗೆ ಏಳೆಂಟು ವರ್ಷ. ಒಂದು ದಿನ ಆ ಪುಟ್ಟ ಬಾಲಕ ತನ್ನ ತಂದೆಯನ್ನು ನೋಡಲು ಎತ್ತಿನಗಾಡಿಯಲ್ಲಿ ಕುಳಿತು ಸಾಗುತ್ತಿದ್ದ. ಗಾಡಿ ಸ್ವಲ್ಪ ದೂರ ಹೋಗಿತ್ತು. ಎತ್ತಿನ ಗಾಡಿಯವನಿಗೆ ಆ ಹುಡುಗ ದಲಿತ ಎಂಬುದು ತಿಳಿದು ಕೂಡಲೇ ಗಾಡಿಯನ್ನು ನಿಲ್ಲಿಸಿ ಆ ಪುಟ್ಟ ಬಾಲಕನನ್ನು ಕೆಳಕ್ಕೆ ತಳ್ಳಿ ಮುಂದೆ ಸಾಗಿಬಿಟ್ಟ. ಆ ಕ್ಷಣ ಆ ಪುಟ್ಟ ಹುಡುಗನ ಮನಸ್ಸಿಗೆ ಅತ್ಯಂತ ಆಘಾತವಾಯಿತು… ಇನ್ನೊಮ್ಮೆ ಕೆರೆಯಲ್ಲಿ ನೀರು ಕುಡಿದ ಎಂಬ ಕಾರಣಕ್ಕೆ ಗ್ರಾಮಸ್ಥರೆಲ್ಲ ಸೇರಿ ಬಾಲಕನಿಗೆ ಥಳಿಸಿದರು. ಆಕಸ್ಮಿಕವಾಗಿ ಮಳೆ ಬಂದಿದ್ದರಿಂದ ರಸ್ತೆ ಬದಿಯಲ್ಲಿದ್ದ ಮನೆಯೊಂದರ ಜಗಲಿಯ ಮೇಲೆ ನಿಂತಿದ್ದಕ್ಕೆ ಮನೆಯ ಯಜಮಾನಿ ಕೋಪದಿಂದ ಜಗಲಿಯಿಂದ ತಳ್ಳಿದ್ದಳಂತೆ… ಕ್ಷೌರಿಕ ಕ್ಷೌರ ಮಾಡದೆ ಹಿಂದಕ್ಕೆ ಕಳುಹಿಸಿದ್ದನಂತೆ. ಹೀಗೆ ಒಂದೇ ಎರಡೇ? ನೂರಾರು ಅವಮಾನ, ಹಿಂಸೆ ಆ ಬಾಲಕನನ್ನು ಇನ್ನಿಲ್ಲದಂತೆ ಕಾಡಿದವು. ನಾವೂ ಮನುಷ್ಯರೇ, ಹಿಂದುಳಿದ ಜನಾಂಗದಲ್ಲಿ ಹುಟ್ಟಿದ್ದೇ ತಪ್ಪಾಯಿತಾ? ಎಂಬ ಭಾವನೆ ಆಗ ಆ ಬಾಲಕನನ್ನು ಕಾಡಿತ್ತು. ಅದಕ್ಕೆಲ್ಲಾ ಹೆದರಿ ಆ ಬಾಲಕ ಮುದುರಿ ಕೂತಿದ್ದರೆ ಇವತ್ತು ಜಗತ್ತೇ ಹೆಮ್ಮೆಯಿಂದ ಕೊಂಡಾಡುವ ಚೇತನವೊಂದು ಇರುತ್ತಿರಲಿಲ್ಲ… ಆದರೆ, ಎಲ್ಲವನ್ನೂ ಗೆದ್ದು ನಿಂತಿದ್ದರಿಂದಲೇ ಇವತ್ತು ದೇಶ ಮರೆಯಲಾರದ ಚೇತನವಾಗಿ, ಸಂವಿಧಾನಶಿಲ್ಪಿಯಾಗಿ ಡಾ.ಬಿ.ಆರ್. ಅಂಬೇಡ್ಕರ್ ನಿಲ್ಲುವಂತಾಯಿತು… ಡಾ.ಬಿ.ಆರ್.ಅಂಬೇಡ್ಕರ್ ಜನಿಸಿದ್ದು 1891ರ ಏಪ್ರಿಲ್ 14ರಂದು ಮಹರ್ ಎಂಬ ದಲಿತ ಜನಾಂಗದಲ್ಲಿ. ಮಹಾರಾಷ್ಟ್ರದ ರತ್ನಗಿರಿ ಜಿ¯್ಲÉಯ ಅಂಬವಾಡೆ ಗ್ರಾಮದಲ್ಲಿ ಸುಭೇದಾರ್ ರಾಮ್ಜೀ ಸಕ್ಬಾಲ್, ತಾಯಿ ಭೀಮಾಬಾಯಿ ಅವರ ಪುತ್ರರಾಗಿ ಜನಿಸಿದರು… ಅಂದಿನ ದಿನದಲ್ಲಿ ಕೆಳಜಾತಿಯ ಹುಡುಗನೊಬ್ಬ ಶಾಲೆಗೆ ಹೋಗಿ ಅಕ್ಷರ ಕಲಿಯುವುದು ಅಷ್ಟೊಂದು ಸುಲಭದ ಮಾತಾಗಿರಲಿಲ್ಲ. ಆದರೆ, ಅಂಬೇಡ್ಕರ್‍ರಿಗೆ ಚಿಕ್ಕಂದಿನಿಂದಲೇ ಓದಬೇಕು, ಏನನ್ನಾದರೂ ಸಾಧಿಸಬೇಕು ಎಂಬ ಛಲ ಇತ್ತು. ಇದಕ್ಕೆ ಹೆತ್ತವರು ನೀರೆರೆದು ಪೋಷಿಸಿದರು. ಇದರ ಜತೆಗೆ ಸಂಸ್ಕøತ ಕಲಿಯಬೇಕೆಂಬ ಮಹದಾಸೆಯಿತ್ತು. ಇದಕ್ಕೆ ಮೇಲ್ಜಾತಿಯವರು ಅಡ್ಡಿಪಡಿಸಿದರು. ಆದರೆ, ಇವರು ಬಗ್ಗಲಿಲ್ಲ… ಬದಲಿಗೆ ಹಠತೊಟ್ಟವರಂತೆ ಸಂಸ್ಕøತ ಕಲಿತು, ಅದರಲ್ಲಿ ಸಂಪೂರ್ಣ ಪಾಂಡಿತ್ಯಗಳಿಸಿ, ತಾವೇ ಹಲವಾರು ವಿಚಾರ ಕ್ರಾಂತಿ ಕೃತಿಗಳನ್ನು ರಚಿಸುವುದರ ಮೂಲಕ ಆಧುನಿಕ ಮನು ಎಂಬ ಕೀರ್ತಿಗೆ ಪಾತ್ರರಾದರು. ಇದನ್ನು ಮಾತ್ರ ಯಾರಿಂದಲೂ ತಡೆಯಲು ಸಾಧ್ಯವಾಗಲೇ ಇಲ್ಲ. ಏಕೆಂದರೆ ಹಠವಾದಿ ಅಂಬೇಡ್ಕರ್‍ರ ಭೀಮಶಕ್ತಿ ಅಂಥದ್ದು… 1907ರಲ್ಲಿ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಅಂಬೇಡ್ಕರ್ ತೇರ್ಗಡೆಯಾದರು. ಅವರಿಗೆ ಆ ವರ್ಷವೇ ರಮಾಬಾಯಿಯೊಂದಿಗೆ ವಿವಾಹವಾಯಿತು. ಆ ನಂತರ ಅವರು ಮುಂಬೈನ ಎಲ್ಫಿನ್‍ಸ್ಟನ್ ಕಾಲೇಜಿನಲ್ಲಿ ಇಂಟರ್‍ಮೀಡಿಯಟ್ ಮುಗಿಸಿ 1921ರಲ್ಲಿ ಬಿಎ ಪದವೀಧರರಾದರು. ನಂತರ ಬರೋಡಾ ಮಹಾರಾಜರ ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡರು… ಆದರೆ, ಆಗ ಬರೋಡ ಮಹಾರಾಜರೇ ಇವರ ಬುದ್ಧಿಶಕ್ತಿಗೆ ಮಾರುಹೋಗಿ ವಿದೇಶದಲ್ಲಿ ವ್ಯಾಸಂಗ ಮಾಡಿ ಬಂದ ನಂತರ ತಮ್ಮ ಹತ್ತು ವರ್ಷಗಳ ಕಾಲ ಕೆಲಸ ಮಾಡಬೇಕೆಂಬ ಕರಾರಿನೊಂದಿಗೆ ಉನ್ನತ ವ್ಯಾಸಂಗಕ್ಕೆ ಅಂಬೇಡ್ಕರ್ ಅವರನ್ನು ಅಮೇರಿಕಾಕ್ಕೆ ಕಳುಹಿಸಿದರು… ಅಲ್ಲಿ ಎಂಎ ಪದವಿಯೊಡನೆ ಪಿಎಚ್‍ಡಿಯನ್ನು ಗಳಿಸಿ 1917ರ ಆಗ 21ರಂದು ಮತ್ತೆ ಭಾರತಕ್ಕೆ ಮರಳಿದರು. ಇಷ್ಟಾದರೂ ಅವರ ಶಿಕ್ಷಣ ದಾಹ ಇಂಗಿರಲಿಲ್ಲ. ಹಾಗಾಗಿ ಪುನಃ 1920ರಲ್ಲಿ ಮತ್ತಷ್ಟು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್‍ಗೆ ಹೋದ ಇವರು 1922ರಲ್ಲಿ ಬ್ಯಾರಿಸ್ಟರ್ ಎಂಬ ಪದವಿಯೊಡನೆ ಭಾರತಕ್ಕೆ ವಾಪಸಾದರು… ವಿದೇಶದಲ್ಲಿ ಕಲಿತು, ಒಂದು ಸಾಲದು ಅಂತ ಹಲವಾರು ಡಾಕ್ಟರೇಟ್ ಪದವಿಗಳನ್ನು ಗಳಿಸಿ ಅಂಬೇಡ್ಕರ್ ಅವರು ಸ್ವದೇಶಕ್ಕೆ ಬಂದಿದ್ದರೂ, ಇಲ್ಲಿ ಮಾತ್ರ ಅದೇ ಅಸ್ಪೃಶ್ಯತೆ ಅವರನ್ನು ಅಪಮಾನಿಸುತ್ತಿತ್ತು. ಆಗ ಅಂಬೇಡ್ಕರ್ ಮೂಕನಾಯಕ ಎಂಬ ಪತ್ರಿಕೆ ಆರಂಭಿಸಿ ಅದರ ಮುಖೇನ ಅಸ್ಪೃಶ್ಯತೆಯ ವಿರುದ್ಧ ಜನ ಜಾಗೃತಿಗೆ ನಿಂತರು… ಬಹಿಷ್ಕೃತ ಹಿತಕಾರಿಣಿ ಎಂಬ ಸಭಾದಂತಹ ಸಂಘಟನೆಗಳನ್ನು ಕಟ್ಟಿ ಅಸ್ಪೃಶ್ಯತೆ ವಿರುದ್ಧ ಸಮಾನತೆಗಾಗಿ ಬೀದಿಗಿಳಿದು ಹಲವು ಹೋರಾಟ ಮಾಡುವ ಮೂಲಕ ದಲಿತರ ಪಾಲಿಗೆ ಅಕ್ಷರಶಃ ತೋರುಬೆರಳಾಗಿದ್ದರು. ಇವರ ಚೌದರ್ ಕೆರೆ ಚಳವಳಿಯಂತೂ ಭಾರತದ ಇತಿಹಾಸದಲ್ಲಿ ದಾಖಲಿಸುವಂಥದ್ದು… ಹೀಗೆ ದಲಿತರ ಪರ ಕ್ರಾಂತಿ ಕಹಳೆ ಪ್ರಾರಂಭವಾಗಿ ನಿಧಾನವಾಗಿ ದೇಶದೆಲ್ಲಾಡೆ ಮೊಳಗತೊಡಗಿತು. ಈ ಸಂದರ್ಭದಲ್ಲಿ ಎರಡನೆ ಮಹಾಯುದ್ಧ ಪ್ರಾರಂಭವಾಗಿತ್ತು. ಆ ಸಂದರ್ಭದಲ್ಲಿ ಬ್ರಿಟಿಷರು ಕೆಲವು ಭಾರತೀಯರನ್ನು ಮಂತ್ರಿಮಂಡಲಕ್ಕೆ ಸೇರಿಸಿಕೊಂಡಾಗ ಪ್ರಥಮ ಪ್ರಾಶಸ್ತ್ಯದಲ್ಲಿ ಅಂಬೇಡ್ಕರ್ ಅವರಿಗೆ ಸ್ಥಾನ ದೊರಕಿತ್ತು… ಭಾರತ ಸ್ವಾತಂತ್ರ್ಯ ಗಳಿಸಿದ ನಂತರ ನೆಹರೂ ಸರ್ಕಾರದಲ್ಲಿ ಪ್ರಥಮ ಕಾನೂನು ಸಚಿವರಾಗಿದ್ದ ಹೆಗ್ಗಳಿಕೆ ಹೊಂದಿದ್ದ ಅಂಬೇಡ್ಕರ್, ಭಾರತ ದೇಶಕ್ಕೆ ಸಶಕ್ತ ಸಂವಿಧಾನ ನೀಡಿದ ಶಿಲ್ಪಿಯಾದರು. ಇದು ಇಡೀ ವಿಶ್ವಕ್ಕೇ ಮಾದರಿ ಸಂವಿಧಾನವಾಗಿರುವುದು ಇವರಿಗೆ ಸಂದ ಮಹಾಗೌರವವೇ ಸರಿ… ಅಧಿಕಾರ ಇರಲಿ, ಇಲ್ಲದಿರಲಿ ಅಂಬೇಡ್ಕರ್ ಅವರು ಹೆಜ್ಜೆ ಇಟ್ಟಲ್ಲೆಲ್ಲಾ ಅಸ್ಪೃಶ್ಯತೆ ನಿವಾರಣೆಗಾಗಿಯೇ ಅವರ ಹೃದಯ ತುಡಿಯುತ್ತಿತ್ತು. ಅಂತೆಯೇ ದಲಿತರ ಪುರೋಭಿವೃದ್ಧಿಗಾಗಿಯೇ ಅವರ ಜೀವ ಸದಾ ಮಿಡಿಯುತ್ತಿತ್ತು. ಭಾರತ ದೇಶದಲ್ಲಿ ಅಂಬೇಡ್ಕರ್ ಎಂಬ ಕ್ರಾಂತಿ ಪುರುಷ ಜನಿಸಿದ್ದರಿಂದಲೇ ದೇಶದ ಅರ್ಧ ಭಾಗದಂತಿರುವ ಉತ್ತರ ಪ್ರದೇಶ ಕಾನ್ಷಿರಾಂರಂಥ ದಲಿತ ನಾಯಕನ ಹಿಡಿತಕ್ಕೆ ಸಿಕ್ಕಿದ್ದು. ಮಾಯಾವತಿಯಂತಹ ದಲಿತ ಮಹಿಳೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು (ಈಗ ಮಾಜಿ) ಸಾಧ್ಯವಾದದ್ದು… ಅಂಬೇಡ್ಕರ್ ಅವರ ಇಡೀ ಜೀವನ ಅಸ್ಪೃಶ್ಯರೆನಿಸಿಕೊಂಡವರಿಗೆ ನ್ಯಾಯವನ್ನೂ, ಸಮಾನತೆಯನ್ನೂ ದೊರಕಿಸಿಕೊಡುವುದಕ್ಕೆ ಮುಡಿಪಾಗಿತ್ತು. ಇದರಲ್ಲಿ ಅವರು ಸಾಕಷ್ಟು ಯಶಸ್ಸನ್ನೂ ಸಾಧಿಸಿದ್ದರು. ಆದರೂ ಹಿಂದೂ ಧರ್ಮದ ಅಸಮಾನತೆಯಿಂದ ರೋಸಿಹೋಗಿದ್ದ ಅವರು ಬುದ್ಧನ ಕಾರುಣ್ಯದಲ್ಲಿ ಆಕರ್ಷಿತರಾಗಿ 1956ರ ಅಕ್ಟೋಬರ್ 14ರಂದು ನಾಗಪುರದಲ್ಲಿ ನಡೆದ ಬೃಹತ್ ಸಮಾರಂಭವೊಂದರಲ್ಲಿ ತಮ್ಮ ಪತ್ನಿ ಡಾ.ಶಾರದಾ ಸೇರಿದಂತೆ ತಮ್ಮ ಅಪಾರ ಅಭಿಮಾನಿಗಳೊಡನೆ ಬೌದ್ಧಧರ್ಮಕ್ಕೆ ಸೇರಿದರು… 1956ರ ಡಿಸೆಂಬರ್ 6ರಂದು ಇಡೀ ದೇಶವನ್ನು ಅನಾಥವಾಗಿಸಿ ಕಾಣದ ಊರಿನತ್ತ ಪಯಣಿಸಿದ ಅಂಬೇಡ್ಕರ್ ಅವರಿಗೆ ಮರಣೋತ್ತರವಾಗಿ ಭಾರತ ಸರ್ಕಾರ 1991ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅಂಬೇಡ್ಕರ್ ಇಂದು ನಮ್ಮ ಮುಂದೆ ಇಲ್ಲದಿರಬಹುದು. ಆದರೆ, ಅವರು ಮಾಡಿದ ಮಹತ್ ಸಾಧನೆಯಿಂದ ನೆನಪಾಗುತ್ತಲೇ ಇರುತ್ತಾರೆ… ******* ಕೆ.ಶಿವು.ಲಕ್ಕಣ್ಣವರ

ಪ್ರಸ್ತುತ Read Post »

You cannot copy content of this page

Scroll to Top