ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಭಾಷೆ

ಭಾಷಾ ಮಾಧ್ಯಮವಲ್ಲ, ಶೈಕ್ಷಣಿಕ ವ್ಯವಸ್ಥೆಯೇ ಬದಲಾಗಬೇಕು! ಡಿ.ಎಸ್.ರಾಮಸ್ವಾಮಿ ಕರ್ನಾಟಕವನ್ನು ಕಾಡುತ್ತಿರುವ ಹಲವು ಸಮಸ್ಯೆಗಳ ನಡುವೆ ಭಾಷೆ, ಭಾಷಾ ಮಾಧ್ಯಮ, ಭಾಷೆಯ ಬಳಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಯ ಮಾತುಗಳ ಸುತ್ತ ಹಬ್ಬಿಕೊಂಡಿರುವುದು ಭಾವನಾತ್ಮಕ ಅಂಶಗಳಾಗಿರುವುದರಿಂದ ಈ ವಿಷಯವನ್ನು ಕುರಿತಂತೆ ಹೊಸ ಚಿಂತನೆಗಳೇ ಸಾಧ್ಯವಾಗದ ಸ್ಥಿತಿಯಲ್ಲಿ ನಾವಿದ್ದೇವೆ. ನಮ್ಮನ್ನು ಕಾಡುತ್ತಿರುವ ನದಿ ನೀರಿನ ವಿಚಾರವೂ ಭಾವನಾತ್ಮಕವಾಗಿಯೇ ನಮ್ಮನ್ನು ಇಕ್ಕಟ್ಟಿಗೆ ತಳ್ಳಿರುವ ಸತ್ಯ ನಮ್ಮ ಮುಂದೆ ಢಾಳಾಗಿಯೇ ಇದೆ. ಈ ನೆಲದಲ್ಲಿ ತೀವ್ರ ಸ್ವರೂಪದ ಆಂದೋಲನಗಳೇನಾದರೂ ನಡೆಯುವುದಾದರೆ ಅದು ಕನ್ನಡ-ಕನ್ನಡತನ ಮತ್ತು ಕನ್ನಡ-ಕನ್ನಡಿಗರ ಉಳಿವು ಈ ವಿಷಯಗಳ ನಡುವೆಯೇ ನಡೆದಿದೆ, ನಡೆಯುತ್ತಿರುತ್ತದೆ. ಇಂದಿಗೂ ಕಾಗೋಡು ಸತ್ಯಾಗ್ರಹವನ್ನು ಹೊರತುಪಡಿಸಿದರೆ ಕನ್ನಡಿಗರಿಗೆ ನೆನಪಾಗುವುದು ಗೋಕಾಕ್ ಚಳುವಳಿ ಮಾತ್ರ. ೧೯೭೦ರ ದಶಕದ ದಲಿತ, ಬಂಡಾಯ ಮತ್ತು ಎಡಪಂಥೀಯ ಚಳುವಳಿಗಳು ಎಷ್ಟೇ ಪ್ರಖರವಾಗಿ ನಮ್ಮ ಮೇಲೆ ಪ್ರಭಾವಿಸಿದ್ದರೂ ಅವುಗಳು ನಮ್ಮ ಮನಸ್ಸಿನಿಂದ ಈಗಾಗಲೇ ಮಾಸಿಹೋಗುತ್ತಿವೆ. ಆದರೆ ಕನ್ನಡಪರ ಹೋರಾಟಗಳ ಕಾವು ಸದಾ ಕಾಡುತ್ತಲೇ ಇರುತ್ತದೆ. ಭಾಷೆಯ ಬಾಂಧವ್ಯದ ಸುತ್ತ ನಾವು ನಿರ್ಮಿಸಿಕೊಂಡಿರುವ ವಲಯದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಭಾಷೆಯ ವಿಭಿನ್ನ ಆಯಾಮಗಳನ್ನು ಹಾಗೂ ಭಾಷೆಯ ಬಳಕೆಯ ಸುತ್ತಲಿನ ಭಾವನಾತ್ಮಕ ಪ್ರಪಂಚವನ್ನು ಬಳಸಿಕೊಳ್ಳುತ್ತಿರುವ ಸಂಘಟನೆಗಳ ಸಂಖ್ಯೆ ನೂರಾರು. ಕನ್ನಡ ಭಾಷೆ ಅವಸಾನ ಹೊಂದುತ್ತಿದೆ ಎಂಬ ಮಿಥ್ಯೆಯನ್ನು, ಕನ್ನಡ ಭಾಷೆಯ ಬಳಕೆ ಕ್ಷೀಣ ಸುತ್ತಿದೆ ಎಂಬ ಭ್ರಮೆಯನ್ನು ಜನಮಾನಸದಲ್ಲಿ ಸೃಷ್ಟಿಸಿ ತಮ್ಮ ಕನ್ನಡತನವನ್ನು ಅಥವಾ ವೀರ ಕನ್ನಡಿಗ ಪರಂಪರೆಯನ್ನು ವೈಭವೀಕರಿಸಿಕೊಳ್ಳುವ ವೇದಿಕೆ-ಸಂಘ-ಸಂಸ್ಥೆಗಳೇ ಈ ಕಾಲದ ಗೊಂದಲಗಳ ಮೂಲ ಕಾರಣ. ಕನ್ನಡ ಮಾಧ್ಯಮ-ಆಂಗ್ಲ ಮಾಧ್ಯಮದ ನಡುವಿನ ಚರ್ಚೆ ಇಂದು ನೆನ್ನೆಯದಲ್ಲ. ಮೈಸೂರು ರಾಜ್ಯದ ನಂತರ  ಉದಯವಾದ ಅಖಂಡ ಕರ್ನಾಟಕದ ಕಾಲದಿಂದಲೂ ಇದು ನಡೆಯುತ್ತ ಬಂದಿದೆ. ಪ್ರಾಥಮಿಕ ಶಾಲಾ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬೋಧಿಸುವ ಸರ್ಕಾರದ ದೃಢ ನಿರ್ಧಾರಕ್ಕೀಗ ಉಚ್ಛ ನ್ಯಾಯಾಲಯದ ತಪರಾಕಿ ತಟ್ಟಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಕರ್ನಾಟಕದಲ್ಲಿ ಕನ್ನಡವನ್ನಷ್ಟೇ ಮಾತೃ ಭಾಷೆಯೆಂದು ಪರಿಗಣಿಸಲಾಗದೆಂಬ  ನ್ಯಾಯಾಲಯದ ಮಾತಿಗೆ ಸಹಜವಾಗಿಯೇ ಕನ್ನಡ ಪರ ಮನಸ್ಸುಗಳು ಕೆರಳಿವೆ. ಏಕೆಂದರೆ ಇಲ್ಲಿ ಭಾವನೆಗಳಷ್ಟೇ ಸಕ್ರಿಯವಾಗಿವೆಯೇ ವಿನಾ ವಾಸ್ತವತೆ ಹಿಂದೆ ಸರಿದಿದೆ. ಈ ಹಿಂದೆ ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಬಗ್ಗೆ ಯೋಚಿಸಿದಾಗಲೂ ಕನ್ನಡ ಪರ ದನಿಗಳು ಇದೇ ರೀತಿಯ ಕೂಗು ಹಬ್ಬಿಸಿದ್ದವು.   ಇಲ್ಲಿ ಪ್ರಶ್ನೆ ಇರುವುದು ಮತ್ತು ಇರಬೇಕಾದದ್ದು ಭಾಷೆಯ ಉಳಿವು-ಅಳಿವಿನ ಬಗ್ಗೆ ಅಲ್ಲ. ಬದಲಿಗೆ ಅದು ನಮ್ಮ ಭವಿಷ್ಯದ ಜನಾಂಗವನ್ನು ಸೃಷ್ಟಿಸುವ ಶೈಕ್ಷಣಿಕ ವ್ಯವಸ್ಥೆಯದ್ದು. ಶಿಕ್ಷಣ ಮಾಧ್ಯಮಕ್ಕೂ ಒಂದು ಭಾಷೆಯ ಉಳಿವಿಗೂ ಇರುವ ಸೂಕ್ಷ್ಮಸಂಬಂಧಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡುವುದಕ್ಕಿಂತಲೂ ಸಮಕಾಲೀನ ಸಂದರ್ಭದ ಅನಿವಾರ್ಯತೆ ಮತ್ತು ಭವಿಷ್ಯದ ಅವಶ್ಯಕತೆಗಳ ದೃಷ್ಟಿಯಿಂದ ನೋಡಬೇಕಾಗುತ್ತದೆ. ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲೇ ಇರಬೇಕು ಎನ್ನುವ ವಾದ ಸಮಂಜಸ. ಈ ನೆಲೆಯಲ್ಲಿ ಹಮ್ಮಿಕೊಳ್ಳುವ ಹೋರಾಟಗಳೂ ಸಮರ್ಥನೀಯ. ಆದರೆ ಪ್ರಸಕ್ತ ಸಾಮಾಜಿಕ-ಆರ್ಥಿಕ-ಸಾಂಸ್ಕೃತಿಕ ಸನ್ನಿವೇಶದಲ್ಲಿ ಮಧ್ಯಮ ಮತ್ತು ಬಡವರ್ಗದ ಜನತೆಗೆ ಅನಿವಾರ್ಯ ಎನಿಸಿರುವ ಅಂಗ್ಲ ಭಾಷೆಯನ್ನು ಬೋಧಿಸಿದಲ್ಲಿ ಅಪಾಯ ಏನಿದೆ? ಹಿರಿಯ ಪ್ರಾಥಮಿಕ ಹಂತದಿಂದ ಆಂಗ್ಲ ಮಾಧ್ಯಮ ಜಾರಿಗೊಳಿಸಿದರೆ ಕನ್ನಡ ಭಾಷೆಯ ಬೆಳವಣಿಗೆ ಹೇಗೆ ಕುಂಠಿತವಾಗುತ್ತದೆ ? ಸರ್ಕಾರ ಕಡ್ಡಾಯ ಕನ್ನಡ ಕಲಿಕೆಯ ತನ್ನ ನಿರ್ಧಾರದಿಂದ ಹಿಂದೆ ಸರಿದ ಕೂಡಲೇ ಕನ್ನಡ ಮಾಧ್ಯಮ ಬಯಸುವವರ ಸಂಖ್ಯೆ ಕಡಿಮೆಯಾಗುವುದೇ ? ಆಂಗ್ಲ ಮಾಧ್ಯಮದ ಶಾಲೆಗಳನ್ನು ತೆರೆಯುವುದರಿಂದ ಕನ್ನಡ ಭಾಷೆಗೆ ಧಕ್ಕೆ ಉಂಟಾಗುತ್ತದೆ ಎನ್ನುವುದಾದರೆ, ಕರ್ನಾಟಕದಾದ್ಯಂತ ನಾಯಿಕೊಡೆಗಳಂತೆ ಬೆಳೆದಿರುವ ಆಂಗ್ಲ ಮಾಧ್ಯಮದ ಶಾಲೆಗಳ ಭರಾಟೆಯಲ್ಲಿ ಕನ್ನಡ ಎಂದೋ ನಶಿಸಿಹೋಗಬೇಕಿತ್ತು. ಹಾಗಾಗಿಲ್ಲವಲ್ಲ. ಅಥವಾ ಕನ್ನಡಪರ ಸಂಘಟನೆಗಳು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ವಿರೋಧಿಸುವುದಾದರೆ ಖಾಸಗಿ ಶಾಲೆಗಳಲ್ಲಿ ಮಾತ್ರ ಆಂಗ್ಲ ಮಾಧ್ಯಮದಲ್ಲಿ ಓದಲಿಚ್ಚಿಸುವ ಮಕ್ಕಳೆಲ್ಲರೂ ಅನಿವಾರ್ಯವಾಗಿ ಖಾಸಗಿ ಶಾಲೆಗಳನ್ನೇ ಆಶ್ರಯಿಸಬೇಕಾಗುತ್ತದೆಂಬ ಅರಿವು ಇವರಿಗಿಲ್ಲವೆ? ಮತ್ತು  ಖಾಸಗಿ ಶಾಲೆಗೆ ಹೋಗುವ ಸಾಮರ್ಥ್ಯವಿಲ್ಲದ ಬಡ ಮಕ್ಕಳು ಕನ್ನಡ ಮಾಧ್ಯಮಕ್ಕೇ ಜೋತು ಬೀಳಬೇಕೇ ? ಇಲ್ಲಿ ಉದ್ಭವಿಸುವ ಪ್ರಶ್ನೆ ಆಯ್ಕೆಯ ಸ್ವಾತಂತ್ರದ್ದು. ಆಂಗ್ಲ ಮಾಧ್ಯಮವನ್ನೇ ವಿರೋಧಿಸುವುದಾದರೆ ಕನ್ನಡ ಪರ ಸಂಘಟನೆಗಳು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಖಾಸಗಿ ಶಾಲೆಗಳ ವಿರುದ್ಧವೇ ತಮ್ಮ ಆಂದೋಲನ ಹಮ್ಮಿಕೊಳ್ಳಬೇಕಾಗುತ್ತದೆಯೇ ವಿನಾ ಸರ್ಕಾರದ ವಿರುದ್ಧವಲ್ಲ! ಅಲ್ಲಿಗೆ ಜನಸಾಮಾನ್ಯರ ಹಿತಾಸಕ್ತಿಯ ವಿರುದ್ಧ ಗುಡುಗುವ ಈ ಸಂಘಟನೆಗಳಿಗೆ ನಿಷೇದದ ಪ್ರಸ್ತಾಪ ಬರುವ ಕಾಲವೂ ದೂರವಿಲ್ಲ. ಇದರ ಜೊತೆಗೆ ಇಂದು ಎಷ್ಟು ಖಾಸಗಿ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿವೆ ಎಂಬ ಸಮೀಕ್ಷೆಯನ್ನೇನ್ನಾದರೂ ಮಾಡಲಾಗಿದೆಯೇ ? ಅಥವಾ ರಾಜ್ಯದ ಜನತೆ ಯಾವ ಮಾಧ್ಯಮವನ್ನು ಬಯಸುತ್ತಾರೆ ಎಂಬ ಸಮೀಕ್ಷೆ ನಡೆಸಲಾಗಿದೆಯೇ ? ಸಂಘಟನಾತ್ಮಕ ಭಾವನೆಗಳು ಜನತೆಯ ಸಮಗ್ರ ಧೋರಣೆಗಳನ್ನು ಪ್ರತಿಬಿಂಬಿಸುತ್ತವೆ ಎಂಬ ಅಹಮಿಕೆಯನ್ನು ಬದಿಗಿಟ್ಟು ಯೋಚಿಸಿದಾಗ ಒಂದು ನಿರ್ದಿಷ್ಟ ವಿದ್ಯಮಾನವನ್ನು ಕುರಿತು ಆಂದೋಲನ ರೂಪಿಸುವ ಸಂಘಟನೆಗಳು ಜನತೆಯ ನೈಜ ಆಶಯಗಳನ್ನು ಅರಿಯಲು ಯತ್ನಿಸಿವೆಯೇ ಅನ್ನುವುದೂ ಮುಖ್ಯವಾಗುತ್ತದೆ. ಈ ಕೆಲಸವನ್ನು ಕನ್ನಡ ಪರ ಸಂಘಟನೆಗಳು ಇಂದಿನವರೆಗೂ ಮಾಡಿಲ್ಲ ಎನ್ನುವುದು ವಿಷಾದನೀಯ ಸಂಗತಿ. ಕನ್ನಡದ ಉಳಿವಿಗಾಗಿ ಶ್ರಮಿಸುವುದು ಇಂದಿನ ತುರ್ತು ಅಗತ್ಯತೆಯೇ ಇರಬಹುದು. ಆದರೆ ಕನ್ನಡ ಅಳಿಸಿಹೋಗುತ್ತಿದೆ ಎಂಬ ಕೂಗು ಅನವಶ್ಯಕ. ಭಾಷೆ ಎಂದಿಗೂ ಅಳಿಯುವುದಿಲ್ಲ. ಕನ್ನಡದಂತಹ ಪ್ರಾಚೀನ ಭವ್ಯ ಪರಂಪರೆಯುಳ್ಳ ಭಾಷೆ ಕ್ಷೀಣಿಸುವುದೂ ಇಲ್ಲ. ಸಮಕಾಲೀನ ಕಾಲಘಟ್ಟದಲ್ಲಿ, ಸಾಮಾಜಿಕ ಸ್ಥಿತ್ಯಂತರಗಳಿಗೆ ಅನುಗುಣವಾಗಿ ಭಾಷೆಯ ಬಳಕೆಯಲ್ಲಿ ವ್ಯತ್ಯಯ ಉಂಟಾಗಿರಬಹುದು ಅಷ್ಟೆ. ಆದರೆ ಅದು ಮೇಲ್ನೋಟಕ್ಕೆ ಕಾಣುವ ಚಿತ್ರಣ. ನಗರೀಕೃತ ಮನಸ್ಸುಗಳು ಯೋಚಿಸುವ ರೀತಿಯೇ ಕೆಲವೊಮ್ಮೆ ತಳಮಟ್ಟದ ವಾಸ್ತವಗಳನ್ನು ಮರೆಮಾಚಿಸಿ ಬಿಟ್ಟಿರುತ್ತವೆ. ಕನ್ನಡ ಪರ ಕೂಗಿಗೂ ಇದು ಅನ್ವಯಿಸುತ್ತದೆ. ಭಾಷೆಯ ಉಳಿವು ಎಂದರೆ ಗ್ರಂಥಗಳಲ್ಲಡಗಿರುವ ಭಾಷಾ ಪಾಂಡಿತ್ಯದ ರಕ್ಷಣೆ ಮಾತ್ರವಲ್ಲ. ಭಾಷಿಕರ ಹಿತಾಸಕ್ತಿಗಳ ರಕ್ಷಣೆಯೂ ಹೌದು. ಕನ್ನಡ ಭಾಷಿಕರೆಂದರೆ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿ ಉನ್ನತ ವ್ಯಾಸಂಗಕ್ಕೆ ಅಡಿಪಾಯ ಹಾಕುವ ಆರ್ಥಿಕ ಸಾಮರ್ಥ್ಯ, ಸಾಮಾಜಿಕ ಸ್ಥಾನಮಾನ ಮತ್ತು ಸಾಂಸ್ಕೃತಿಕ ಅವಕಾಶಗಳುಳ್ಳ ಮಧ್ಯಮ-ಮೇಲ್ ಮಧ್ಯಮ ವರ್ಗಗಳು ಅಥವಾ ಮೇಲ್ಜಾತಿಯವರು ಮಾತ್ರವಲ್ಲ. ನವ ಉದಾರವಾದ ಸೃಷ್ಟಿಸಿರುವ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹಿಂದುಳಿದ ವರ್ಗಗಳಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಆಂಗ್ಲ ಭಾಷಾ ಶಿಕ್ಷಣ ಒಂದು ಅನಿವಾರ್ಯತೆಯಾಗಿರುವುದು ಒಪ್ಪಲೇಬೇಕಾದ ಸತ್ಯ . ಈ ಅನಿವಾರ್ಯತೆಯನ್ನು ಪೂರೈಸುವ ಹೊಣೆಗಾರಿಕೆ ನಮ್ಮನ್ನಾಳುತ್ತಿರುವವರ ಮೇಲಿದೆ. ಸರ್ಕಾರಿ ಶಾಲೆಗಳನ್ನೇ ಅವಲಂಬಿಸಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮ ಲಭ್ಯವಾಗುವುದಾದರೆ ಕನ್ನಡ ಭಾಷೆ ನಶಿಸುವುದಿಲ್ಲ ಬದಲಾಗಿ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ಬಡವಿದ್ಯಾರ್ಥಿಗಳು ಕನ್ನಡದ ಮತ್ತು ಕರ್ನಾಟಕದ ಪ್ರತಿಷ್ಠೆಯನ್ನು ಹೆಚ್ಚಿಸುತ್ತಾರೆ. ಇಲ್ಲಿ ಉಜ್ವಲ ಭವಿಷ್ಯಕ್ಕಾಗಿ ಆಂಗ್ಲ ಭಾಷೆ ಅಗತ್ಯ ಎಂದು ಭಾವಿಸಬೇಕಿಲ್ಲ. ಶೈಕ್ಷಣ ಕ ಪಯಣದಲ್ಲಿ ಮುನ್ನಡೆಯಲು ಲಭ್ಯವಿರುವ ಹಾರುಮಣೆಗಳಲ್ಲಿ ಆಂಗ್ಲ ಭಾಷೆಯೂ ಒಂದು ಎಂಬ ವಾಸ್ತವವನ್ನು ಗ್ರಹಿಸಬೇಕಷ್ಟೆ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಮನ್ನಣೆ ನೀಡುವುದೇ ಆದರೆ ಈ ವಿಚಾರದಲ್ಲಿ ಜನಾಭಿಪ್ರಾಯ ಸಂಗ್ರಹಿಸುವುದೇ ಸೂಕ್ತ. ಭಾಷಾ ಮಾಧ್ಯಮದ ವಿಚಾರವನ್ನು ಅಸ್ತಿತ್ವಗಳ ನೆಲೆಗಟ್ಟಿನಲ್ಲಿ ನೋಡಿದಾಗ ಭಾವನೆಗಳು ಮೇಲುಗೈ ಸಾಧಿಸುತ್ತವೆ. ವಾಸ್ತವಗಳು ದೂರಾಗುತ್ತವೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸಾಂವಿಧಾನಿಕ ದೃಷ್ಟಿಕೋನದಿಂದ ಕೂಡಿದೆ. ಸಾಂವಿಧಾನಿಕ ಹಕ್ಕುಗಳನ್ನು ಪ್ರತಿಪಾದಿಸುವ, ಸಮರ್ಥಿಸುವ ದನಿಗಳು ಈ ತೀರ್ಪಿಗೆ ತಲೆಬಾಗಲೇಬೇಕಾಗುತ್ತದೆ. ಹಾಗಾದರೆ ಕನ್ನಡದ ಪ್ರಶ್ನೆ ಬಗೆಹರಿಯುವುದು ಹೇಗೆ ? ಆಡಳಿತ ವ್ಯವಸ್ಥೆಯ ಇಚ್ಚಾಶಕ್ತಿ ಮತ್ತು ಕನ್ನಡಪರ ದನಿಗಳ ಪ್ರಬುದ್ಧತೆ ಎರಡೂ ಇಲ್ಲಿ ಅಗ್ನಿಪರೀಕ್ಷೆಗೊಳಗಾಗಿರುವುದು ಸ್ಪಷ್ಟ.   ಇಂಗ್ಲಿಷ್ ಭಾಷೆಯನ್ನು ಯಾವ ತರಗತಿಯಿಂದ ಕಲಿಸಬೇಕು ಮತ್ತು ಕಲಿಕೆಯ ಮುಖ್ಯ ಮಾಧ್ಯಮ ಯಾವ ಭಾಷೆಯಲ್ಲಿರಬೇಕು ಎಂಬ ಚರ್ಚೆಗೆ ದಿನದಿಂದ ದಿನಕ್ಕೆ ಕಾವೇರುತ್ತಲೇ ಇದೆ. ಭಾಷಾ ಬೋಧನೆಯ ಸಾಧ್ಯತೆ ಮತ್ತು ಮಿತಿಗಳನ್ನು ಅರಿತವರಿಗಿಂತ ಹೆಚ್ಚಾಗಿ ಇಡೀ ವಿಷಯವನ್ನು ಭಾವನಾತ್ಮಕವಾಗಿ ಗ್ರಹಿಸಿದವರು ಮಾತ್ರ ಈ ವಿಷಯದ ಚರ್ಚೆಯ ಮುಂಚೂಣಯಲ್ಲಿದ್ದಾರೆ. ಪರಿಣಾಮವಾಗಿ ಯಾವುದು ಚರ್ಚೆಯಾಗಬೇಕಿತ್ತೋ ಅದು ಚರ್ಚೆಯಾಗದೆ ಕನ್ನಡದ ಬಳಕೆ ಎಂಬುದು ವರ್ಗ, ವರ್ಣ, ಜಾತಿ ಮುಂತಾದುವುಗಳ ಚರ್ಚೆಯಾಗಿ ಬದಲಾಗುತ್ತಿದೆ. ಭಾಷೆಯೊಂದರ ಕಲಿಕೆಯ ಹಿಂದೆ ಈ ಎಲ್ಲಾ ಸಾಮಾಜಿಕ ಅಸಮಾನತೆಗಳು ಪರಿಣಾಮ ಬೀರುತ್ತವೆಯಾದರೂ ಕೇವಲ ಅವುಗಳನ್ನಷ್ಟೇ ಪರಿಗಣಿಸಿ ಭಾಷೆಯೊಂದರ ಕಲಿಕೆಗೆ ಸಂಬಂಧಿಸಿದ ನೀತಿ ರೂಪಿಸಲು ಸಾಧ್ಯವಿಲ್ಲವಲ್ಲ. ಒಂದನೇ ತರಗತಿಯಿಂದ ಇಂಗ್ಲಿಷ್ ಕಲಿಸುವುದರಿಂದ ಮಕ್ಕಳಿಗೆ ಹೊರೆಯಾಗುತ್ತದೆ. ಕನ್ನಡಕ್ಕೆ ಅಪಾಯ, ಕನ್ನಡ ಸಂಸ್ಕೃತಿಗೆ ಅಪಾಯ ಎಂದು ಒಂದು ಗುಂಪಿನವರು ವಾದಿಸುತ್ತಿದ್ದರೆ ಮತ್ತೊಂದು ಗುಂಪಿನವರು ಇಂಗ್ಲಿಷ್ ಸಾಮಾಜಿಕ ಅಸಮಾನತೆಯ ನಿವಾರಣೆಗೆ ಅತಿ ಅವಶ್ಯ. ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಇಂಗ್ಲಿಷ್ ಇಲ್ಲದಿದ್ದರೆ ಸಾಧ್ಯವಿಲ್ಲ. ಶೋಷಿತ ವರ್ಗಗಳಿಗೆ ಇಂಗ್ಲಿಷ್ನಿಂದಲೇ ವಿಮೋಚನೆ ಎನ್ನುತ್ತಿದ್ದಾರೆ. ದುರಂತವೆಂದರೆ ಈ ಎರಡೂ ವಾದಗಳನ್ನು ಮಂಡಿಸುತ್ತಿರುವವರೆಲ್ಲರೂ  ತಮ್ಮ ಮಕ್ಕಳಿಗೆ ಪ್ರತಿಷ್ಠಿತ ಇಂಗ್ಲಿಷ್ ಶಾಲೆಗಳಲ್ಲಿ ಪ್ರವೇಶಗಿಟ್ಟಿಸಿಕೊಂಡಿದ್ದಾರೆ. ವಾಸ್ತವದಲ್ಲಿ ಈ ಎರಡೂ ವಾದಗಳೂ ವಿತಂಡವಾದಗಳೇ ಸರಿ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡ ಸಂಸ್ಕೃತಿ ಇಷ್ಟೂ ವರ್ಷಗಳಿಂದ ಉಳಿದುಕೊಂಡು ಬಂದಿದೆ. ಈ ಕನ್ನಡ ಸಂಸ್ಕೃತಿ ಎಂಬುದು ಇತರ ಎಲ್ಲಾ ಸಂಸ್ಕೃತಿಗಳಂತೆ ಚಲನಶೀಲವೇ ಆಗಿರುವುದರಿಂದ ಆಯಾ ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ತನ್ನನ್ನು ಉಳಿಸಿಕೊಂಡಿದೆ. ಹೈದರ್, ಟಿಪ್ಪು ಬಹಮನಿ ಸುಲ್ತಾನರ ಆಡಳಿತದ ಅವಧಿಯಲ್ಲಿ ದಖ್ಖನಿ ಆಡಳಿತ ಭಾಷೆಯಾಗಿತ್ತು. ಹಾಗೆಂದು ಕನ್ನಡ ಮರೆಯಾಗಲಿಲ್ಲ. ಬ್ರಿಟಿಷರ ಆಳ್ವಿಕೆಯ ಅವಧಿಯಲ್ಲಿ ಇಂಗ್ಲಿಷ್ ಆಳುವವರ ಭಾಷೆಯಾಗಿತ್ತು. ಆಗಲೂ ಕನ್ನಡ ಮರೆಯಾಗಲಿಲ್ಲ. ಈ ಸವಾಲುಗಳನ್ನು ಎದುರಿಸಿ ಅದು ಉಳಿದುಕೊಂಡಿತು. ಈಗಲೂ ಅಷ್ಟೆ ಜಾಗತೀಕರಣದ ಎಲ್ಲ ಸವಾಲುಗಳನ್ನೂ ಅದು ಎದುರಿಸಿ ಉಳಿದುಕೊಳ್ಳುತ್ತದೆ. ಈ ಸವಾಲುಗಳನ್ನು ಎದುರಿಸಲು ನಮ್ಮ ಭಾಷೆಯನ್ನು ಸಿದ್ಧಗೊಳಿಸಬೇಕು. ಅಂದರೆ ಹೊಸ ಪರಿಕಲ್ಪನೆಗಳನ್ನು ನಮ್ಮ ಭಾಷೆಯಲ್ಲಿ ಚರ್ಚಿಸಬೇಕು. ಇದರ ಬದಲಿಗೆ ಕಂಪ್ಯೂಟರನ್ನು `ಗಣಕ ಯಂತ್ರ’ ಎಂದರೆ ಇಂಜಿನಿಯರನ್ನು ‘ಅಭಿಯಂತರ’ ಎಂದ ಮಾತ್ರಕ್ಕೆ ಕನ್ನಡ ಉದ್ಧಾರವಾಗುತ್ತದೆ ನಂಬಿದರೆ ಕನ್ನಡವನ್ನು ಶಿಶುವಿಹಾರದಿಂದ ಸ್ನಾತಕೋತ್ತರ ಮಟ್ಟದವರೆಗೆ ಕಡ್ಡಾಯ ಮಾಡಿದರೂ ಅದು ಉಳಿಯಲಾರದು. ಒಂದನೇ ತರಗತಿಯಿಂದ ಇಂಗ್ಲಿಷ್ ಕಲಿತವರೆಲ್ಲರೂ ಇಂಗ್ಲಿಷ್ ಪಂಡಿತರಾಗಿ ಬಿಡುವುದಿಲ್ಲ. ನನ್ನ ತಲೆಮಾರಿನ ಹಾಗೂ ಅದಕ್ಕೂ ಹಿಂದಿನವರೆಲ್ಲರೂ ಹಳ್ಳಿಯ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿಯೇ ಕಲಿತು ಬಂದು ಕಾಲೇಜು ಮಟ್ಟದಲ್ಲಿ ಇಂಗ್ಲಿಷಿಗೆ ತೆರೆದುಕೊಂಡವರು. ನಾವೆಲ್ಲರೂ ಇಂಗ್ಲಿಷನ್ನು ಸಲೀಸಾಗಿ ಬಳಸುತ್ತಿಲ್ಲವೇ? ಹೌದು, ಕೆಲ ಸಂದರ್ಭಗಳಲ್ಲಿ ಇಂಗ್ಲಿಷ್ ಒಂದು ಸವಾಲು ಎನಿಸಿತ್ತು. ಆದರೆ ಅದೇನೂ ಮೀರಲಾರದ ಸವಾಲಾಗಿರಲಿಲ್ಲ. ಏಕೆಂದರೆ ನಮ್ಮ ಇಂಗ್ಲಿಷ್ ಈಗಿನವರ ಇಂಗ್ಲಿಷಿಗಿಂತ ಚೆನ್ನಾಗಿಯೇ ಇದೆ! ಈಗ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯುತ್ತಿರುವವರೆಲ್ಲ ಸರ್ವಜ್ಞರಾಗಿಬಿಡುವುದಿಲ್ಲ. ಏಕೆಂದರೆ ನಮಗಿರುವ ಸವಾಲು ಕಲಿಯುವ ಮಾಧ್ಯಮದ್ದಲ್ಲ. ಶಿಕ್ಷಣದ್ದು. ಈ ಸವಾಲನ್ನು ಎದುರಿಸುವ ಬದಲಿಗೆ ಅದರಿಂದ ತಪ್ಪಿಸಿಕೊಳ್ಳುವ ಹಾದಿಯಾಗಿ ಮಾಧ್ಯಮದ ಕುರಿತ ಚರ್ಚೆಯನ್ನು ಅನವಶ್ಯಕವಾಗಿ ಬೆಳಸುತ್ತಿದ್ದೇವೆ. ನಮ್ಮ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಿಕ್ಷಣಗಳೆರಡೂ ಈ ಕಾಲದ ಅಗತ್ಯವನ್ನು ಪೂರೈಸುತ್ತಿಲ್ಲ. ಜಗತ್ತು ಹಳ್ಳಿಯಾಗಿರುವ ಈ ಹೊತ್ತಿನಲ್ಲಿಯೂ ನಮ್ಮ ಜ್ಞಾನದ ಎಲ್ಲೆಗಳನ್ನು ವಿಸ್ತರಿಸಿಕೊಳ್ಳಲು ಅಗತ್ಯವಿರುವ ಪರಿಕರಗಳನ್ನು ಇವು ಒದಗಿಸುತ್ತಿಲ್ಲ. ಈ ಮೂಲಭೂತ ಪ್ರಶ್ನೆಗೆ ಉತ್ತರ ಕಂಡುಕೊಳ್ಳದೆ ಮಾಧ್ಯಮ ಯಾವುದಾಗಿರಬೇಕು ಎಂಬುದರ ಕುರಿತು ಚರ್ಚಿಸುವುದರಲ್ಲಿ ಯಾವ ಅರ್ಥವೂ ಇಲ್ಲ. ಬದುಕಿಗೆ ಪ್ರಸ್ತುತವಾಗದ ಶಿಕ್ಷಣವನ್ನು ಯಾವ ಮಾಧ್ಯಮದಲ್ಲಿ ಒದಗಿಸಿದರೂ ಅದು ವ್ಯರ್ಥವೇ. ಮಕ್ಕಳ ಬೌದ್ಧಿಕ ವಿಕಸನಕ್ಕೆ ತಾಯ್ನುಡಿಯಲ್ಲೇ ಕಲಿಕೆಯಾಗಬೇಕು ಅನ್ನುವುದನ್ನು ಜಗತ್ತಿನ ವಿಜ್ಞಾನಿಗಳು, ಮನಶಾಸ್ತçಜ್ಞರು, ಕಲಿಕೆ ತಜ್ಞರು, ವಿಶ್ವಸಂಸ್ಥೆ ಸೇರಿದಂತೆ ಸಾವಿರಾರು ಜನರು ಪ್ರತಿಪಾದಿಸುತ್ತಾರೆ. ವಿಶ್ವಸಂಸ್ಥೆಯAತೂ

ಭಾಷೆ Read Post »

ಇತರೆ

ನನ್ನೊಳಗೆ!

ಕನಸಿನೂರಿಂದ…. -ಕನಸಿನೂರಿನವ ಮತ್ತದೆ ದ್ವಂದ್ವ! ಚಿತ್ತಭಿತ್ತಿಯಲಿ ಸ್ಥಿರವಾಗಿ ಉಳಿದ ಅ ಮೊಗವನೆಲ್ಲಿ ಕಂಡೆ, ಪಡೆಯದೆಲೆ ಕಳೆದುಕೊಂಡೆ? ನೆನಪಿಸಿಕೊ ಹೃದಯ ಕವಾಟವೆ ಕಣ್ಣೊಳಗೆ ಬಿಂಬವಾಗಿ ಎದೆಯೊಳಗೆ ಕಂಬವಾಗಿ ನರನಾಡಿಗಳಲಿ ಜೀವ ಮಿಡಿತವಾಗಿ ನಿಂತಾ ಮೊಗವ ಎಲ್ಲಿ ಕಂಡೆ ಹೇಗೆ ಕಳೆದುಕೊಂಡೆ. ಮೊದಲ ನೋಟದಲೇನು ತುಂಬಿಕೊಂಡೆ ಆ ಮುದ್ದು ಮೊಗದ ನಕ್ಷತ್ರಗಳ ಕಣ್ಣುಗಳನೊ  ಅದರೊಳಗಿನ ಬೆಳಕನ್ನೊ? ಆ ಬಿರಿಯದೆ ಬಿಗಿದ ತುಟಿಗಳ ಹಿಂದಿನ ಮೌನವನೊ? ಬಹಳ ವರುಷಗಳ ಹಿಂದೆ ಆ ಮುಖವನ್ನು ಮೊದಲ ಬಾರಿಗೆ ನೋಡಿದೆ. ಅದೇಕೊ ಆ  ಮುಖ ನನ್ನ ಸೆಳೆದುಬಿಟ್ಟಿತ್ತು.ಎಷ್ಟರ ಮಟ್ಟಿಗೆ ಹೃದಯದಲ್ಲಿ ಅಚ್ಚಳಿಯದೆ ನಿಂತು ಬಿಟ್ಟಿತೆಂದರೆ ಇವತ್ತಿನವರೆಗು ಬೇರ್ಯಾವ ಮುಖವು ಅದರ ಸ್ಥಳ  ಆಕ್ರಮಿಸಲಾಗಲಿಲ್ಲ.ಬಹುಶ:ಅದರ ನೆನಪುಗಳಲ್ಲೆ ನೂರಾರು ಪುಟಗಳ ಬರೆಯುತ್ತ ಹೋದೆ. ತೀರಾ ಮೊನ್ನೆ ಮೊನ್ನೆಯವರೆಗು  ಮತ್ತೆಂದಾದರು ಆ ಮುಖ ನೋಡುತ್ತೇನೆಂಬ ಕಲ್ಪನೆಯೂ ನನಗಿರಲಿಲ್ಲ….. ಆದರೆ ನಾವು ನಂಬಲಿ ಬಿಡಲಿ ಕಾಲ ನಮ್ಮ ಜೊತೆ  ವಿಧಿಯ ಹೆಸರಿನಲ್ಲಿ ಆಟ ಆಡುತ್ತದೆ. ಅಂತಹದೊಂದು ಆಟದ ಭಾಗವಾಗಿ ಮತ್ತೆ ನಾನಾ ಮುಖವನ್ನು ನೋಡಿದೆ. ಮತ್ತೆ ಮತ್ತೆ ಆ ಮುಖ ನೋಡುವಾಗ ಮನಸು ಮಿತಿಗಳನ್ನು ಮೀರುವ ವ್ಯರ್ಥ ಪ್ರಯತ್ನ ಮಾಡುತ್ತಿದೆ.. ಆ ಮುಖವನ್ನು ಬೊಗಸೆಯೊಳಗೆ ಹಿಡಿದುಕೊಂಡು ನುಡಿಯಬೇಕು-ಎಲ್ಲಿದ್ದೆಇಲ್ಲಿಯವರೆಗು?ಮತ್ತೆಕೆ ಬಂದೆ ನನ್ನೆದುರಿಗೆ ಅಂತ ಕೇಳಬೇಕೆನಿಸುತ್ತೆ.ಆ ದೈರ್ಯ ಸಾಲುತ್ತಿಲ್ಲ…ಸಾದ್ಯವಾದಷ್ಟು ಆ ಮೊಗದಿಂದ ದೂರ ಸರಿದು ಹೋಗಬೇಕೆನಿಸಿದಾಗೆಲ್ಲ  ಸಾವು ನೆನಪಾಗುತ್ತದೆ.ಅದಿಲ್ಲದೆಯೂ ಇಷ್ಟು ವರ್ಷಗಳಕಾಲ ಬದುಕಿದ್ದು ವ್ಯರ್ಥವೆನಿಸಿ ಆ ಮುಖವ ಮರೆಯಬೇಕೆಂದು ಶಪಥಗೈದು  ಹಗಲು ಮುಗಿಸುತ್ತೇನೆ. ಮತ್ತೆ ಬಂದ ಇರುಳಿನ ಸ್ವಪ್ನದೊಳಗಾ  ಮುಖ ಬಂದು ಕೇಳುತ್ತದೆ….ಇಷ್ಟು ವರ್ಷ ನನಗಾಗಿ ಕನಸಿದ್ದು ಸುಳ್ಳೇ? ಹೇಳು ಮತ್ತೇಕೆ ಮರೆಯಲೆತ್ನಿಸುವ ನಾಟಕ? ಉತ್ತರಿಸಲಾಗದೆ ತಡವರಿಸುತ್ತೇನೆ….. ಕರಗಿದ ಕತ್ತಲಿಗೆ ಕುಡಿಯೊಡೆದು ಬಂದ ಬೆಳಗು ಮತ್ತದೆ ಮುಖವನ್ನು ಎದುರು ನಿಲ್ಲಿಸುತ್ತದೆ. ಇದನ್ನು ಬದುಕಿನಕಡೆಯ ದಿನವೆಂದೊ-ಕಡೆಯ ಕ್ಷಣವೆಂದೊ ಅಂದುಕೊಂಡು ಹೇಳಿ ಬಿಡು ಮುಖಕ್ಕೆ ಮುಖ ಕೊಟ್ಟು ಅದರ ಕಣ್ಣುಗಳಲ್ಲಿ ನಿನ್ನಕಣ್ಣ ನೆಟ್ಟುಪ್ರೀತಿಸುತ್ತೇನೆಂದು! ಮತ್ತದೆ ದ್ವಂದ್ವ! ===============================

ನನ್ನೊಳಗೆ! Read Post »

ಇತರೆ

ಲಹರಿ

ಮಳೆಯಲ್ಲಿ ನೆನೆದ ನೆನಪು ಪ್ರಮೀಳಾ ಎಸ್.ಪಿ. ” ಮಳೆ”… ಈ ಪದಕ್ಕೂ ಅದು ಸುರಿಯುವಾಗ ಕೊಡುವ ಅನುಭವಕ್ಕೂ ,ಪ್ರಕೃತಿಯಲ್ಲಿ ,ಉಂಟಾಗುವ ಬದಲಾವಣೆಗೂ ನಮ್ಮ ಬದುಕಿನಲ್ಲಿ ತರುವ ಸ್ಥಿತ್ಯಂತರಕ್ಕೂ ಹೇಳಲಾಗದ ಅವಿನಾಭಾವ ಸಂಬಂಧವಿದೆ.ಮಳೆ ಬರುತ್ತಿದೆ ಎಂದರೆ ಒಬ್ಬೊಬ್ಬರ ಯೋಚನಾ- ಲಹರಿ ಒಂದೊಂದು ರೀತಿ ಹರಿಯುತ್ತದೆ.ಹಿಂದೆಲ್ಲಾ ಹಳ್ಳಿಗಳಲ್ಲಿ ಮಳೆಗಾಲದ ಆರಂಭವಾಗುವ ಮುಂಚೆ ದನಕರುಗಳಿಗೆ ಹುಲ್ಲು ಸೊಪ್ಪು ಹೊಂದಿಸಿಕೊಂಡು;ಮನೆಗೆ ಸೌದೆ,ಬೆರಣಿ ಹಿತ್ತಲಿನಲ್ಲಿ ನೆನೆಯದ ಹಾಗೆ ಇಟ್ಟುಕೊಂಡು, ಹಪ್ಪಳ ಉಪ್ಪಿನಕಾಯಿ,ಹಿಟ್ಟು ಬೇಳೆ ಬೆಲ್ಲ ಕೂಡಿಟ್ಟುಕೊಂಡು,ಹೊಲಕ್ಕೆ ಗೊಬ್ಬರ ಚೆಲ್ಲಿ ,ಉಕ್ಕೆ ಪಾಕವಾಗಿಸಿ ಮಳೆಗಾಗಿ ಕಾಯುತ್ತಿದ್ದರು ನಮ್ಮ ರೈತಾಪಿ ಜನಗಳು.ಈಗಿನ ಕಾಲದ ಚಿಂತನಾ ರೀತಿಯೇ ಬೇರೆ.ಮಕ್ಕಳಿಗಂತೂ ಮಳೆ ಬಂತೆಂದರೆ ದೋಣಿ ತೇಲಿ ಬಿಡುವ,ಮರಳಲ್ಲಿ ಮನೆಕಟ್ಟುವ ಆಸೆ.ಪ್ರೇಮಿಗಳಿಗ ಪಾಲಿಗೆ ಅದು ಯಾವ ಮಳೆಯಾದರು ಮುಂಗಾರು ಮಳೆಯೇ!!.ಮಳೆಯಲಿ ಜೊತೆಯಲಿ ಹಾಡುವ ಆಸೆ.ತೊಪ್ಪೆಯಾಗುತ್ತಾ ನಾಲ್ಕು ಹೆಜ್ಜೆ ಹಾಕುವಾಸೆ.ಮೈ ಮರೆತು ಜಗ ಮರೆತು ಮಳೆಯೊಳಗೆ ಒಂದಾಗುವಾಸೆ. ಹನಿ ಮಳೆಯೋ,ಜಡಿ ಮಳೆಯೋ,ಸುರಿ ಮಳೆಯೋ,ಧಾರಾಕಾರ ಮಳೆಯೋ,ಮುಸಲಧಾರೆಯೋ,ಪ್ರೀತಿಯ ಮಧುರ ಕ್ಷಣಗಳನ್ನು ಮತ್ತೆಮತ್ತೆ ಮನ ಮಿಡಿಸುತ್ತದೆ.ಕೆಲಸಕ್ಕೆ ಹೋಗುವ ಹೆಂಗಸರಿಗೆ ಹೊಸ ಛತ್ರಿ,ಜರ್ಕಿನ್ ಕೊಳ್ಳೋ ಯೋಚನೆ.ಅಮ್ಮಂದಿರಿಗೆ ಎಲ್ಲ ರೀತಿಯ ಹಿಟ್ಟು ,ಮೆಣಸಿನ ಪುಡಿ, ಸಂಬಾರ ಪುಡಿ ಡಬ್ಬಿಗೆ ಕೆಡದಂತೆ ತುಂಬೋ ತವಕ.ರೈತರಿಗೆ ಬಿತ್ತನೆ ಬೀಜ ಗೊಬ್ಬರಕ್ಕೆ ಕಾಸು ಹೊಂದಿಸೋ ಚಿಂತೆ.ರೈತ ಮಹಿಳೆಯರಿಗೆ ಯಾವ ಸಂಘದಲ್ಲಿ ಎಷ್ಟು ಸಾಲ ತೆಗೆದುಕೊಡಬಹುದು ಅನ್ನೋ ಯೋಚನೆ,ಗದ್ದೆ ಬಯಲಿನವರಿಗೆ ಈ ಭಾರಿ ಎರೆಡು ಬೆಳೆ ತೆಗೆಯುವ ಆಸೆ, ಸರ್ಕಾರಕ್ಕೆ ಜೋರು ಮಳೆ ಬಂದು ಕಾವೇರಿ ವಿವಾದ ಬಗೆಹರಿಯಲಿ ಅನ್ನೋ ಚಿಂತೆ. ಮುದುಕರಿಗೆ ಈ ಭಾರಿ ಪಿಂಚಣಿ ಹಣದಲ್ಲಿ ಉದ್ದ ಕೊಡೆ ,ಮಳೆಗಾಲದ ಬೂಟು ತರಿಸಿಕೊಳ್ಳೋ ಆಸೆ.ನಂಗೆ ಮಳೆ ಬರಲಿ, ಆದರೆ ರಸ್ತೆ ಬೇಗ ಒಣಗಲಿ ಗಾಡಿ ಓಡಿಸಲು ಸುಲಭವಾಗಲಿ,ಶಾಲೆಗೆ ಯಾವುದೆ ತೊಂದರೆ ಇಲ್ಲದೆ ಸೇರುವಂತಾಗಲಿ ಅನ್ನೋ ಭಾವನೆ,ಶಾಲಾ ಮಕ್ಕಳಿಗೆ ಮಳೆಗಾಲದ ರಜೆ ಸಿಗಬಹುದು…ಎಂಬ ನಂಬಿಕೆ. ಹೀಗೆ ಮಳೆಯೊಂದಿಗೆ ಭಾವನೆಗಳ ಬೆಸುಗೆ… ನೆನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಮ್ಮ ಮನೆ ಕೆಲಸಕ್ಕೆ ಬಂದ ಸರೋಜಮ್ಮಬಹಳ ಸಪ್ಪಗಿದ್ದರು.ಕಾರಣ ಕೇಳದ ನಾನು ಕೆಲಸಕ್ಕೆ ಹೊರಡುವ ಆತುರದಲ್ಲಿದ್ದೆ. ಅವರೇ ನಿಂತು ಮಾತು ಶುರುಮಾಡಿದರು…”ಅಮ್ಮಾ ರಾತ್ರಿಯ ಮಳೆಗೆ ಮನೆಯಲ್ಲಿ ನೀರು ತುಂಬಿ ಹಾಸಿಗೆ ನೆನೆದು ಹೋಯಿತು.ಸೊಸೈಟಿ ಇಂದ ತಂದ ಅಕ್ಕಿ ಪೂರ್ತಿ ನೀರೊಳಗೆ ಮುಳುಗಿತು.ಇನ್ನೊಮ್ಮೆ ಅಕ್ಕಿ ಕೊಡೋವರೆಗೆ ಏನು ಮಾಡೋದು ?ಅದು ಅನ್ನ ಮಾಡಲು ಬರಲ್ಲ ..ತಿಂಡಿಗೆ ಆಗುತ್ತೆ,ಎಂದರು.ಗಂಡನಿಲ್ಲದ ಅವರು ವಿಧವೆ ಮಗಳನ್ನು ಮತ್ತು ಮೊಮ್ಮೊಗುವನ್ನು ಸಾಕಿಕೊಂಡು ಬದುಕು ನಡೆಸುತ್ತಿರುವುದು ನನಗೆ ಗೊತ್ತಿದ್ದ ವಿಷಯವಾಗಿತ್ತು.ಬಾಡಿಗೆ ಮನೆ ,ಕೂಲಿ ಕೆಲಸ, ಮದುವೆಯಾದರು ಮಗುವಿನೊಂದಿಗೆ ಮನೆಗೆ ಬಂದ ಮಗಳು.ಬಿ ಪಿ ಎಲ್ ಕಾರ್ಡಿನ ಅಕ್ಕಿ.ನನ್ನ ಯೋಚನೆ ಮುಂದುವರೆಯಿತೇ ಹೊರತೂ ಅವರಿಗೆ ಸಮಾಧಾನ ಹೇಳದೆ ಚಪಾತಿ ಲಟ್ಟಿಸಲು ಮುಂದಾದೆ. ನನ್ನನ್ನು ಸರೋಜಮ್ಮನ ಸ್ಥಾನದಲ್ಲಿ ಕಲ್ಪಿಸಿಕೊಂಡೆ. ಕಣ್ಣುಗಳು ಒದ್ದೆಯಾದವು.ಕವಿಗಳ ಕಲ್ಪನೆಯ ಮಳೆಗೂ ,ಕೊಡಗಿನಲ್ಲಿ ಧಾರಾಕಾರ ಸುರಿದು ಮನೆ ಮನ ಬಯಲು ಬೆಟ್ಟಗಳನ್ನೆಲ್ಲ ಕೊಚ್ಚಿ ಹಾವಳಿ ತಂದ ಮಳೆಗೂ,ಉತ್ತರ ಕರ್ನಾಟಕದಲ್ಲಿ ಅಬ್ಬರಿಸಿ ಹಾಳುಗೆಡವಿದ ಮಳೆಗೂ, ಸರೋಜಮ್ಮನ ಮನೆಯ ಹಾಸಿಗೆ ಅಕ್ಕಿ ನೆನೆಸಿ ಉಣ್ಣಲು ಉಡಲು ಮಲಗಲು ಇಲ್ಲದಂತೆ ಬದುಕನ್ನು ಚೆಲ್ಲಾಪಿಲ್ಲಿಯಾಗಿಸಿದ ಮಳೆಗೂ…ಯಾವ ಭಾವ ಬೆಸೆಯಬಹುದೆಂದು ತಿಳಿಯದೆ ಶೂನ್ಯಮನಸ್ಕಳಾಗಿ ಕೊರಗುತ್ತಾ ಕುಳಿತೆ. ಮತ್ತೆ ಮತ್ತೆ ಹುಚ್ಚು ಮಳೆ ಹೊಯ್ದು ಬದುಕು ಮೂರಾಬಟ್ಟೆಯಾಗದಿರಲಿ.ಬಡಜನರ ಬದುಕು ಕೊಚ್ಚಿ ಹೋಗದಿರಲಿ ದೇವರೆ ಎಂದು ಮೊರೆಯಿಟ್ಟೆ . ಇಲ್ಲಿಗೆ ಇಪ್ಪತ್ತೆರಡು ವರ್ಷಗಳ ಹಿಂದೆ ನನ್ನ ಗೆಳತಿಯರು ಒಂದಿಬ್ಬರು ಪ್ರೀತಿಯ ಮಳೆಯಲ್ಲಿ ತೊಪ್ಪೆಯಾದರಲ್ಲ.ಅಪ್ಪ ಅಮ್ಮನ ವಿರೋಧವಿದ್ದರೂ ತಾವು ಒಪ್ಪಿದವನೊಡನೆ ಹೆಜ್ಜೆ ಹಾಕಿದರಲ್ಲ.ಸುತ್ತಲಿನ ಸಮಾಜಕ್ಕೆ ಸೊಪ್ಪುಹಾಕದೆ,ತಪ್ಪನ್ನೇ ತಬ್ಬಿ ನಡೆದರಲ್ಲ.ಆಗಿನ್ನೂ ಈ “ಮುಂಗಾರು ಮಳೆ” ಯ ಪ್ರಭಾವ ಇಷ್ಟು ದಟ್ಟವಾಗಿ ಇರಲಿಲ್ಲ.” ಚಳಿ ಚಳಿ ತಾಳೆನು” ಹಾಡಿಗೆ ನಮ್ಮಂಥ ಸಾವಿರಾರು ಯುವಜನರು ಮಾರುಹೋಗಿದ್ದ ಕಾಲವದು.ಪ್ರೀತಿಯ ಬಲೆಯಲ್ಲಿ ಬಿದ್ದರೂ ಬಲಿಷ್ಠ ಪರಿಸರವನ್ನು ಎದುರಿಸಲಾಗದೆ ಎದೆಯೊಳಗೆ ಮುಚ್ಚಿಟ್ಟು ,ದಿಂಬಿನಲ್ಲಿ ಮುಖವಿಟ್ಟು ಕೋಣೆಯೊಳಗೆ ಬಿಕ್ಕಳಿಸುತ್ತಿದ್ದ ದಿನಗಳು ನೆನಪಾಗ ಹತ್ತಿವೆ.ಬಿಟ್ಟೂ ಬಿಡದಂತೆ ಟಪಟಪನೆ ಸುರಿವ ಮಳೆ ಹನಿಗಳ ನಿನಾದ ನೆನಪ ಸಾಲುಗಳಿಗೆ ಶ್ರುತಿ ಹಿಡಿದಿದೆ.ಮಾಗಿದ ಮನವನ್ನು ನೆಲದಂತೆ ಮೆದುವಾಗಿಸಿದೆ.ಹೊರಗೆ ಕಾಲಿಟ್ಟರೆ ಜಿಡಿಮಳೆ ಬೇಸರ ತರುತ್ತದೆ.ಹಳೆಯ ಪ್ರೇಮದ ಬೆಸುಗೆ ನೆನೆಯದಂತೆ ಮುಸುಕೆಳೆದಿದೆ.ಹೆದರಿ ಒಳಗೆ ಕೂರುವಂತಿಲ್ಲ.ಬದುಕನ್ನು ಕಟ್ಟಿಕೊಳ್ಳಬೇಕು.ರಾಶಿ ರಾಶಿ ಕೆಲಸಗಳು ಕಾಯುತ್ತಿವೆ.ಹೌದು ನನ್ನವರಿಗೀಗ ಧುಮ್ಮಿಕ್ಕುವ ಧಳಧಳನೆ ಸುರಿವ ಆರ್ಭಟ ಕಡಿಮೆಯಾಗಿದೆ.ಉತ್ತರೆ ಮಳೆಯಂತೆ ತತ್ತರಿಸುತ್ತಿದ್ದ ರೀತಿ ಸೌಮ್ಯವಾಗಿದೆ.ಮಕ್ಕಳಾದ ಮೇಲಂತೂ ಪ್ರೀತಿಯಲ್ಲಿ ಏನೋ ಕೊರತೆ ಕಾಡತೊಡಗಿದೆ.ಒರತೆ ಹಂಚಿಕೆಯಾಗಿದೆ.ಎಲ್ಲರಿಗೂ ಹೀಗೇನಾ?.ಸೊಲ್ಲು ಸೊಲ್ಲಿಗೂ ನನ್ನ ಹೆಸರನ್ನೇ ಜಪಿಸುತ್ತಾ ಸುತ್ತಲೇ ಸುಳಿಯುತ್ತಿದ್ದ ನಲ್ಲನಿಗೇನಾಗಿದೇ ?.ಒಲ್ಲೆನೆಂದರೂ ಬಿಡದೆ ಮೊಲ್ಲೆ ಮೊಗ್ಗುಗಳ ರಾಶಿ ಪೇರಿಸುತ್ತಿದ್ದ ಇನಿಯನೆಲ್ಲಿ ಕಳೆದು ಹೋದ?!.ಛೇ ಈ ಪ್ರೀತಿಯೊಂದು ಹುಚ್ಚು.ಬದುಕಿನ ವಸಂತಗಳು ಮುಗಿದು ಹೇಮಂತ ಬಂದರೂ ಮಳೆ ಮಾತ್ರ ನಿಲ್ಲುತಿಲ್ಲ .ಸವಿಜೇನಿನ ಇನಿದನಿಯಲಿ ಕೂಗುತಿದ್ದ ಕೋಗಿಲೆ ಗಾನ ನಿಲ್ಲಿಸಿಬಿಟ್ಟಿತೆ ?ಮಳೆ ತಂದ ಶೀತಲ ಮಾರುತಗಳಿಗೆ ಗಂಟಲು ಬಿಗಿಯಿತೆ?.ನೆನೆದ ಪುಕ್ಕಗಳಲಿ ಚಳಿ ಧಾಳಿಯಿಟ್ಟಿತೆ?. ಹೌದು ನಾವು ಈಗ ಮೊದಲಿನಂತಿಲ್ಲ.ಎಷ್ಟೊಂದು ಸುಧೀರ್ಘಕಾಲ ಸುಳಿವು ನೀಡದೇ ಸರಿದೇ ಹೋಯಿತಲ್ಲ.ವೈಶಾಖನಾಗಲೇ ಅಡಿಯಿಟ್ಟಿದ್ದಾನೆ.ಗಿಡಮರಗಳು ಬೋಳಾಗಿವೆ.ಬಿಸಿಯುಸಿರು ಬುಸುಗುಡುತ್ತಿದೆ.ಮತ್ತೆ ಮಳೆ ಬೇಕೆನಿಸುತ್ತಿದೆ…

ಲಹರಿ Read Post »

ಇತರೆ

ರಾಜ್ಯೋತ್ಸವದ ನೆಪದಲ್ಲೆರಡು ಮಾತು.

ಬಲಾಢ್ಯವಾಗಬೇಕಿರುವ ಕನ್ನಡಭಾಷಿಕ ಸಮುದಾಯ! ನಿಮ್ಮೆಲ್ಲರಿಗು  ಕನ್ನಡ ರಾಜ್ಯೋತ್ಷವದ ಶುಭಾಶಯಗಳು…ಈ ಸಂದರ್ಭದಲ್ಲಿ ನಿಮ್ಮೊಂದಿಗೆಕೆಲ ವಿಷಯಗಳನ್ನು ಹಂಚಿಕೊಳ್ಳಬೇಕಿದೆ. ನಿಜವಾದ ಅರ್ಥದಲ್ಲಿ ಇವತ್ತು ಕನ್ನಡ ಚಳುವಳಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಂತೆ ಕಾಣುತ್ತಿವೆ. ಇಂತಹ ಚಳುವಳಿಗಳ ಆತ್ಮವಾಗಿರಬೇಕಾಗಿದ್ದ ಅಕ್ಷರಸ್ಥ ಮದ್ಯಮವರ್ಗ ಸ್ವತ:  ಜಡಗೊಂಡಿರುವ ಈ ಸನ್ನಿವೇಶದಲ್ಲಿ ನಮ್ಮ ಕನ್ನಡ ಚಳುವಳಿ ಸಹ ನಿಸ್ತೆÃಜಗೊಂಡಂತೆ ನಮಗೆ ಬಾಸವಾಗುತ್ತಿದ್ದರೆ ಅಚ್ಚರಿಯೇನಲ್ಲ.ಇಂತಹ ನಿರಾಶಾದಾಯಕ  ಸನ್ನಿವೇಶದಲ್ಲಿಯೂ ಕನ್ನಡ ಚಳುವಳಿಯ ಕುರಿತು ಒಂದಿಷ್ಟು ಆಶಾಬಾವನೆ ಒಡಮೂಡಿದ್ದು ಇತ್ತೀಚೆಗೆ ನಡೆದ ಕಳಸಾಬಂಡೂರಿ ಮತ್ತು ಕಾವೇರಿ ನದಿ ನೀರಿನ ಹಂಚಿಕೆಯ ವಿವಾದಗಳ ಬಗ್ಗೆ ನಡೆದ ಹೋರಾಟದ ಕ್ಷಣದಲ್ಲಿ ಮಾತ್ರ.   ಹಾಗೆ ನೋಡಿದರೆ ನಾವು ಕನ್ನಡ ಚಳುವಳಿಯ ಒಟ್ಟು ಅರ್ಥವನ್ನೆ ಸಂಕುಚಿತಗೊಳಿಸಿ ನೋಡುವ ವಿಷಯದಲ್ಲಿಯೇ ಎಡವಿದ್ದೇವೆ. ಯಾಕೆಂದರೆ ಕನ್ನಡ ಚಳುವಳಿ ಎಂದರೆ ಅದು ಕೇವಲ  ಕನ್ನಡ ಭಾಷೆಗೆ ಸೀಮಿತವಲ್ಲ. ಬದಲಿಗೆ ಕರ್ನಾಟಕದ ನೆಲ, ಜಲ, ಭಾಷೆ, ನೈಸರ್ಗಿಕ ಸಂಪನ್ಮೂಲಗಳೂ ಸೇರಿದಂತೆ ಒಟ್ಟು ಕನ್ನಡ ನಾಡಿನ ಚಳುವಳಿಯೇ ನಿಜವಾದ ಕನ್ನಡ ಚಳುವಳಿ! ಆದರೆ ಇದುವರೆಗು ನಡೆದ ಕನ್ನಡ ಚಳುವಳಿಗಳು  ಕೇವಲ ಭಾಷಿಕ ಚಳುವಳಿಗಳಾಗಿ: ಆಡಳಿತ ಭಾಷೆ ಕನ್ನಡವಾಗಬೇಕು, ಕನ್ನಡ ಮಾದ್ಯಮದಲ್ಲಿ ಶಿಕ್ಷಣ ನೀಡಬೇಕು, ನಾಮಪಲಕಗಳು ಕನ್ನಡದಲ್ಲಿ ಇರಬೇಕೆಂಬ ಬೇಡಿಕೆಗಳಿಗೆ ಮಾತ್ರ ಸೀಮಿತವಾಗಿ ನಡೆಯುತ್ತ ಬಂದಿವೆ. ಇಂತಹ  ಏಕಮುಖ ಚಳುವಳಿಯ ಅಪಾಯವೆಂದರೆ ಕನ್ನಡ ಚಳುವಳಿ ಏಕಾಕಿಯಾಗಿ ಉಳಿದುಬಿಡುವುದು ಮತ್ತು ಕನ್ನಡದ ನೆಲ,ಜಲ,ಸಂಪನ್ಮೂಲಗಳ ವಿಷಯ ತನಗೆ ಸಂಬಂದಿಸಿದ್ದಲ್ಲವೆಂಬ ಅಭಿಪ್ರಾಯ ಬೆಳೆಸಿಕೊಂಡು ಬಿಡುವುದಾಗಿದೆ. ಹೀಗಾದಾಗ ಇಡಿ ಕನ್ನಡ ಚಳುವಳಿ ಕೇವಲ ಭಾಷಾ ದುರಭಿಮಾನದ ಸಂಕೇತವಾಗಿ ಮಾತ್ರ ಉಳಿದು ಬಿಡುವ ಅಪಾಯವಿದೆ.    ಅದರಲ್ಲು ಇವತ್ತಿನ ಜಾಗತೀಕರಣ ನಮ್ಮ ಸ್ಥಳೀಯ ಸಂಪನ್ಮೂಲಗಳನ್ನು ರಾಕ್ಷಸ ರೀತಿಯಲ್ಲಿ ನುಂಗುತ್ತ, ನಮ್ಮೊಳಗೆ ಕೊಳ್ಳುಬಾಕತನವನ್ನು ಸೃಷ್ಠಿಸಿ, ನಮ್ಮ ಪ್ರಾದೇಶಿಕ ಭಾಷೆ, ಸಂಸ್ಕೃತಿ, ಜನಪದ ಪರಂಪರೆಗಳನ್ನೆಲ್ಲ ನಾಶ ಮಾಡುತ್ತ ಹೋಗುತ್ತಿರುವ ಈ ದಿನಗಳಲ್ಲಿ ಕನ್ನಡ ಚಳುವಳಿ ತನ್ನ ಮಿತಿಯನ್ನು ಮೀರಿ ಬೆಳೆಯಬೇಕಿದೆ.ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಖಾಸಗಿ ಬಂಡವಾಳಶಾಹಿ ಶಕ್ತಿಗಳು ದೈತ್ಯಾಕಾರವಾಗಿ ಬೆಳೆಯುತ್ತ ನಮ್ಮ ಬಹುಮುಖಿ ಸಂಸ್ಕೃತಿಯನ್ನು ಏಕರೂಪಿ ಸಂಸ್ಕೃತಿಯಾಗಿ ಬದಲಾಯಿಸಹೊರಟಿರುವ ಸಂಕೀರ್ಣಸನ್ನಿವೇಶದಲ್ಲಿ,(ಇದೀಗ ನಮ್ಮಾಳುವವರು ಸಹ ಏಕರಾಷ್ಟ,ಏಕಧರ್ಮ, ಏಕಭಾಷೆಯ ಹೆಸರಲ್ಲಿ ಸ್ಥಳೀಯವಾದುದನ್ನೆಲ್ಲ ಹೊಸಕಿ ಹಾಕಲು ಹೊರಟಂತಿದೆ) ಕನ್ನಡ ಚಳುವಳಿ ಎನ್ನುವುದು ಏಕಾಂಗಿಯಾಗಿ ನಿಲ್ಲದೆ  ಉಳಿದೆಲ್ಲ  ಚಳುವಳಿಗಳ ಜೊತೆ ಬೆರೆತು ಹೋರಾಡಿದರೆ ಮಾತ್ರ  ಕನ್ನಡ ಚಳುವಳಿ  ಕನ್ನಡ ಭಾಷಿಕ ಸಮುದಾಯದ ಚಳುವಳಿಯಾಗಿ ಗುರುತಿಸಿ ಕೊಳ್ಳಬಹುದು. ಅದು ನಮ್ಮ ನೆಲಜಲಗಳನ್ನು ಸಂರಕ್ಷಿಸಿಕೊಳ್ಳುವ ವಿಚಾರವಿರಲಿ, ರೈತರ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವುದಿರಲಿ, ದಲಿತ ಮತ್ತಿತರ ಹಿಂದುಳಿದ ಜಾತಿಗಳ ಹಕ್ಕುಗಳನ್ನು ಕಾಪಾಡುವುದಿರಲಿ, ಶಿಕ್ಷಣದಲ್ಲಿ ಕನ್ನಡವೇ ಪ್ರದಾನ ಭಾಷೆಯಾಗುವ ವಿಚಾರವಿರಲಿ, ಕನ್ನಡಿಗರಿಗೆ ಉದ್ಯೊಗದಲ್ಲಿ ಆದ್ಯತೆ ನೀಡುವ ವಿಚಾರವೇ ಆಗಿರಲಿ,  ಇವೆಲ್ಲವೂ ಕನ್ನಡದ ಚಳುವಳಿ ಎಂಬ ಬಾವನೆ ಮೂಡಿದಾಗ ಮಾತ್ರ ಅಂತಹ ಚಳುವಳಿಗೆ ನಿಜವಾದ ಬಲ ಬರುತ್ತದೆ. ಕರ್ನಾಟಕದ ಮಟ್ಟಿಗೆ ಕನ್ನಡವೆಂದರೆ ಕೇವಲ ಭಾಷೆ ಮಾತ್ರವಲ್ಲ ಎಂಬುದನ್ನು ನಾವುಗಳು ಅರ್ಥಮಾಡಿಕೊಳ್ಳಬೇಕಿದೆ.     ಕರ್ನಾಟಕದ ಎಲ್ಲ ಸಮಸ್ಯೆಗಳು ಕನ್ನಡದ ಸಮಸ್ಯೆಗಳೇ ಎಂಬ ಆರೋಗ್ಯಕಾರಿ ಮನೋಬಾವ ರೂಪುಗೊಂಡಾಗ ಮಾತ್ರ ನಾವು ಒಳಗಿನ ಮತ್ತು ಹೊರಗಿನ ಅನ್ಯ ಸಂಸ್ಕೃತಿಗಳ ಎದುರು ಹೋರಾಡಬಲ್ಲಂತಹ ಕಸುವು ಪಡೆಯಬಹುದಾಗಿದೆ. ಇಂತಹದೊಂದು  ಚಳುವಳಿಯನ್ನು ರೂಪಿಸಲು ನಮಗೆ ಸಾದ್ಯವಾದಾಗ ಮಾತ್ರ ಕರ್ನಾಟಕ ತನ್ನ ಹಕ್ಕುಗಳಿಗಾಗಿ ಇನ್ನೊಬ್ಬರ ಮುಂದೆ ಕೈಚಾಚಿ ನಿಲ್ಲಬೇಕಾದ ಪರಿಸ್ಥಿತಿ ಬರುವುದಿಲ್ಲ. ಇಂತಹ ಕನ್ನಡ ಚಳುವಳಿಯಿಂದ ಮಾತ್ರ ಕನ್ನಡ ಭಾಷಿಕ ಸಮುದಾಯ ಸಶಕ್ತವಾಗಬಹುದು. ಕನ್ನಡ ಭಾಷಿಕ ಸಮುದಾಯ ಸಶಕ್ತವಾಗುವುದು ಎಂದರೆ ನಾವು ರಾಜಕೀಯವಾಗಿ ಬಲಿಷ್ಠವಾಗುವುದು ಎಂದರ್ಥ!      ಹೌದು ಇವತ್ತು ಎರಡು ಕಡೆಯಿಂದ ನಾವು ದುರ್ಬಲರಾಗುತ್ತ ಹೋಗುತ್ತಿದ್ದೇವೆ. ಮೊದಲನೆಯದಾಗಿ ಕಳೆದ ಏಳು ದಶಕಗಳಿಂದ ಸರದಿಯಂತೆ ನಮ್ಮನ್ನು ಆಳುತ್ತ ಬರುತ್ತಿರುವ ರಾಷ್ಟ್ರೀಯ ಪಕ್ಷಗಳು ಭಾಷೆ,ನೆಲ,ಜಲಗಳ ವಿಷಯಗಳಲ್ಲಿ ನಮ್ಮ ಹಿತಾಸಕ್ತಿಯನ್ನು ಕಡೆಗಣಿಸುತ್ತ ರಾಜಕೀಯವಾಗಿ ಬಲಿಷ್ಠವಾಗಿರುವ ಇತರೇ ರಾಜ್ಯಗಳ ಹಿತಾಸಕ್ತಿಯನ್ನು ಕಾಯುತ್ತ ಬರುತ್ತಿವೆ. ಇನ್ನು ಎರಡನೆಯದಾಗಿ,ತೊಂಭತ್ತರ ದಶಕದ ನಂತರ ನಾವು ಒಪ್ಪಿಕೊಂಡ ಮುಕ್ತ ಆರ್ಥಿಕ ನೀತಿ ವಿಶ್ವದ ಎಲ್ಲ ಬಗೆಯ ಬಂಡವಾಳಶಾಹಿ ಕಂಪನಿಗಳನ್ನು ತಂದು ನಮ್ಮ ನೆಲದಲ್ಲಿ ಬೀಡುಬಿಡಿಸಿದೆ. ಆ ಬಂಡವಾಳಶಾಹಿ ಶಕ್ತಿಗಳಿಗೆ ಪ್ರಾದೇಶಿಕ ಭಾಷೆ ಸಂಸ್ಕೃತಿಯನ್ನು ಕಾಪಾಡಬೇಕೆನ್ನುವ ಯಾವ ಜರೂರತ್ತೂ ಇರುವುದಿಲ್ಲ. ಜೊತೆಗೆ  ಯಾವ ಹಿಂಜರಿಕೆಯೂ ಇಲ್ಲದೆ  ನಮ್ಮ ನೆಲ-ಜಲವನ್ನು ಅವ್ಯಾಹತವಾಗಿ ಬಳಸಿಕೊಳ್ಳುತ್ತ ಹೋಗುತ್ತವೆ. ಇನ್ನು ಶಿಕ್ಷಣ ಮಾಧ್ಯಮದಲ್ಲಿ ಮಾತೃಭಾಷೆ, ಸ್ಥಳೀಯರಿಗೆ ಉದ್ಯೋಗವೆಂಬುದೆಲ್ಲ ಅವುಗಳ ಪದಕೋಶದಲ್ಲಿ ಇರದ ಶಬ್ದಗಳು. ಹೀಗೆ ಎರಡೂ ಕಡೆಯಿಂದಲೂ ನಾವು ಶೋಷಿತರಾಗುತ್ತ ಹೋಗುತ್ತೇವೆ.   ಇದನ್ನು ತಪ್ಪಿಸಲು ಮತ್ತು  ನಮ್ಮ ನೆಲಜಲಭಾಷೆ ಸಂಸ್ಕೃತಿಗಳನ್ನು ಉಳಿಸಿಕೊಳ್ಳಲು ನಮಗಿರುವ ಏಕೈಕ ಮಾರ್ಗ. ಕನ್ನಡ ಚಳುವಳಿ ಮತ್ತು  ತನ್ಮೂಲಕ ಕನ್ನಡಭಾಷಿಕ ಸಮುದಾಯವನ್ನು ರಾಜಕೀಯವಾಗಿ ಬಲಿಷ್ಠವಾಗಿಸುತ್ತ ಹೋಗುವುದು.ನಮ್ಮದೇ ಬಲಾಢ್ಯ ಪ್ರಭುತ್ವ ಮಾತ್ರ ನಮ್ಮದನ್ನೆಲ್ಲ ಕಾಪಾಡಬಹುದಾಗಿದೆ. ಕನ್ನಡವನ್ನು ಒಂದು ಪ್ರಬಲ ರಾಜಕೀಯಶಕ್ತಿಯಾಗಿ ಪರಿವರ್ತಿಸಲು ಇರುವ ಏಕೈಕ ಮಾರ್ಗವೆಂದರೆ ನಮ್ಮ ಕನ್ನಡಚಳುವಳಿಯನ್ನು ಬಲಗೊಳಿಸುತ್ತ ಹೋಗುವುದು. ಈಗಿರುವ ಹಲವು ಚಳುವಳಿಗಳ( ರೈತ, ದಲಿತ, ಕಾರ್ಮಿಕ, ಇತ್ಯಾದಿ)ನ್ನು ಕನ್ನಡದ ಹೆಸರಲ್ಲಿ ಒಟ್ಟಿಗೆ ಕರೆದೊಯ್ಯಬೇಕಾದ ಅನಿವಾರ್ಯತೆ ನಮಗಿದೆ.    ಇನ್ನು ಕನ್ನಡ ಭಾಷಿಕ ಸಮುದಾಯವೊಂದು ಬಲಾಢ್ಯ ರಾಜಕೀಯ ಶಕ್ತಿಯಾಗಲು ಈ ಚಳುವಳಿಗಳ ಒಳಗಿಂದಲೇ ಒಡಮೂಡಿಬರುವ ಒಂದು ಪ್ರಾದೇಶಿಕ ರಾಜಕೀಯ ಪಕ್ಷವೊಂದರ ಅಗತ್ಯವಿದೆ. ಇದು ನಂತರದಲ್ಲಿ ಯೋಚಿಸಬೇಕಾದ ವಿಚಾರವಾಗಿದೆ. ಸದ್ಯಕ್ಕೆ ಕನ್ನಡ ಭಾಷಿಕ ಸಮುದಾಯವನ್ನು ರಾಜಕೀಯವಾಗಿ ಬಲಾಢ್ಯಗೊಳಿಸುವವತ್ತ  ಮಾತ್ರ ನೋಡಬೇಕಾಗಿದೆ. ಈ ದಿಸೆಯಲ್ಲಿ  ನಮ್ಮ ಎಲ್ಲ ಚಳುವಳಿಗಳೂ ಕನ್ನಡ ಚಳುವಳಿಯ ವಿಶಾಲವೇದಿಕೆಯ ಅಡಿಯಲ್ಲಿ ಬರಬೇಕಿದೆ( ಇದು ಕಷ್ಟದ ಕೆಲಸವೆಂದು ಕನ್ನಡಿಗರಿಗೆ ಅನಿಸಿದರೆ ಅದು ನಮ್ಮ ದುರಂತವಷ್ಟೆ!) ================================================

ರಾಜ್ಯೋತ್ಸವದ ನೆಪದಲ್ಲೆರಡು ಮಾತು. Read Post »

ಇತರೆ

ಚರ್ಚೆ

ಟಿಪ್ಪು ಸುಲ್ತಾನನ ಇತಿಹಾಸ ಪಠ್ಯದಿಂದ ತೆಗೆಯುವುದು ಎಷ್ಟು ಸರಿ ? ಡಾ.ಮಹಾಲಿಂಗ ಪೋಳ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ ಹಲವು ರಾಜ ಸಂಸ್ಥಾನಗಳ ಬೀಡಾಗಿತ್ತು.ಅವು ತಮ್ಮದೇಯಾದ ಗಡಿಯನ್ನು ಹೊಂದಿದ್ದವು.ತಮ್ಮ ಸಂಸ್ಥಾನದ ಗಡಿಯನ್ನು ವಿಸ್ತರಿಸಲಿಕ್ಕೆ ಪಕ್ಕದ ರಾಜ್ಯಗಳ ಮೇಲೆ ದಾಳಿ ಮಾಡುತಿದ್ದವು.ಅಲ್ಲದೇ ತಮ್ಮದೇಯಾದ ಸಂಸ್ಕೃತಿಯ ಪ್ರಸಾರಕ್ಕೆ ಕ್ರಮ ಕೈಗೊಳ್ಳುತ್ತಿದ್ದವು.ಇದು ರಾಜಪ್ರಭುತ್ವ ಚಾಲ್ತಿಯಾದಾಗಿನಿಂದ ಬಂದದ್ದು.ಟಿಪ್ಪು ಕೂಡ ಈ ನಾಡಿನಲ್ಲಿ ಒಂದು ಸಂಸ್ಥಾನದ ರಾಜನಾಗಿದ್ದವ.ಅವನ ಸಂಸ್ಥಾನದ ಪ್ರದೇಶ ವಿಸ್ತರಿಸಲು ಪಕ್ಕದ ರಾಜ ಸಂಸ್ಥಾನಗಳ ಮೇಲೆ ದಾಳಿ ಮಾಡಿದ ಸರಿ.ಹಲವು ವಿರೋಧಿಗಳನ್ನು ಕೊಂದ ಸರಿ.ಈ ಕೆಲಸ ಟಿಪ್ಪು ಒಬ್ಬನು ಮಾತ್ರ ಮಾಡಿದನೆ ? ಆಗಿನ ಕಾಲದಲ್ಲಿ ಒಂದು ಸಂಸ್ಥಾನ ಇನ್ನೊಂದು ಸಂಸ್ಥಾನದ ಮೇಲೆ ಹಗೆ ಸಾಧಿಸಿ ದಾಳಿ ಮಾಡುವುದು ಸಾಮಾನ್ಯವಾಗಿತ್ತು.ಟಿಪ್ಪು ಹಿಂದುಗಳನ್ನು ಕೊಂದ ಅವನು ದುಷ್ಟ ಎಂದು ಈ ಕಾಲಘಟ್ಟದಲ್ಲಿ ನಿಂತು ತೀರ್ಮಾಣಿಸುವುದು ಎಷ್ಟು ಸರಿ ? ಯಾವುದೇ ಐತಿಹಾಸಿಕ ಘಟನೆಗಳನ್ನು ಆಯಾ ಸಂದರ್ಭದ ರಾಜನೀತಿಗೆ ಅನುಗುಣವಾಗಿ ವಿಶ್ಲೇಷಣೆ ಮಾಡಬೇಕೆ ಹೊರತು ಇಂದಿನ ರಾಜಕೀಯ ತೆವಲುಗಳಿಗಾಗಿ ವಿಶ್ಲೇಷಣೆ ಮಾಡುವುದಲ್ಲ. ಹಿಂದೂಗಳ ಮೇಲೆ ದಾಳಿ ಮಾಡಿದ ,ಹಿಂದೂಗಳನ್ನು ಕೊಂದ ಎಂದು ಕಾರಣಕೊಟ್ಟು ಪಠ್ಯದಿಂದ ಅವನ ಇತಿಹಾಸ ಕೈಬಿಡುವುದಾದರೆ,ಹಿಂದೂ ಸಾಮ್ರಾಜ್ಯ ವಿಜಯನಗರದ ಮೇಲೆ ದಾಳಿಮಾಡಿ ಅವನತಿಗೆ ಕಾರಣವಾದ ಶಾಹಿ ಸುಲ್ತಾನರ ಇತಿಹಾಸ ,ರಕ್ಕಸ ತಂಗಡಗಿ ಯುದ್ಧದ ಕುರಿತಾಗಿ ಪಠ್ಯದಿಂದ ತೆಗೆದು ಹಾಕಬಹುದೇ ? ಧರ್ಮದ ಆಧಾರದ ಮೇಲೆ ಇತಿಹಾಸ ನಿರ್ಧರಿಸುವುದು ಸರಿಯಲ್ಲ.ರಾಮಾನುಜಚಾರ್ಯರನ್ನು ದೇಶಬಿಟ್ಟು ಓಡಿಸಿದ ಶೈವ ಧರ್ಮಿಯ ಕುಲೋತ್ತುಂಗ ಚೋಳನ ಇತಿಹಾಸವನ್ನು ಪಠ್ಯದಿಂದ ತೆಗೆಯಿರಿ ಎಂದು ವೈಷ್ಣವರು ಒತ್ತಾಯ ಮಾಡಿದರೆ ಹೇಗೆ ? ಹಾಗೆಯೇ ಕಲಚೂರಿ ಅರಸನ ಸೈನಿಕರ ವಚನಕಾರರನ್ನು ಬೆನ್ನಟ್ಟಿಕೊಂಡು ಹೋಗಿ ಕೊಂದ ಇತಿಹಾಸ ಗೊತ್ತೆ ಇದೆ.ಲಿಂಗಾಯತ ಸಮುದಾಯದವರೆಲ್ಲ ಕಲಚೂರಿಗಳ ಇತಿಹಾಸ ಪಠ್ಯದಲ್ಲಿ ಬೇಡ ಎಂದರೆ ಹೇಗೆ ? ಅಂದಿನ ರಾಜನೀತಿಗಳನ್ನು ಇಂದಿನ ರಾಜನೀತಿಯ ದೃಷ್ಟಿಕೋನದಿಂದ ವಿಶ್ಲೇಷಣೆ ಮಾಡಬಾರದು. ಶಿವಾಜಿಯು ತನ್ನ ತಂದೆಯ ಬಂದನಕ್ಕೆ ಕಾರಣರಾದರು ಎಂಬ ಉದ್ದೇಶದಿಂದ ಮುಧೋಳ,ಜಮಖಂಡಿ ಸಂಸ್ಥಾನಗಳ ಮೇಲೆ ದಾಳಿ ಮಾಡಿದ.ಮುಧೋಳ ಸಂಸ್ಥಾನದ ಭಾಗಗಳನ್ನು ನಾಶಮಾಡಿ ಸುಟ್ಟುಹೋದನಂತೆ.ಹಾಗಾದರೆ ಮುಧೋಳ,ಜಮಖಂಡಿ ಭಾಗದವರು ಶಿವಾಜಿಯ ಇತಿಹಾಸವನ್ನು ಪಠ್ಯದಿಂದ ತೆಗೆಯಿರಿ ಎಂದರೆ ಅದಕ್ಕೆ ಅರ್ಥ ಬರುತ್ತದೆಯೆ ? ಒಂದು ಕಾಲಘಟ್ಟದ ಇತಿಹಾಸದಲ್ಲಿ ಹಲವು ಬದಲಾವಣೆಗೆ ಕಾರಣವಾದ ಒಬ್ಬ ಐತಿಹಾಸಿಕ ವ್ಯಕ್ತಿಯನ್ನು ಬದಿಗಿಟ್ಟು ಇತಿಹಾಸ ಓದುವುದೆಂದರೆ ಅದು ನೈಜ ಇತಿಹಾಸಕ್ಕೆ ಮಾಡಿದ ಮೋಸ. ಹಿಂದೂ ರಾಜರಾರು ಬೇರೆ ಸಂಸ್ಥಾನದ ಮೇಲೆ ದಾಳಿ ಮಾಡಿಲ್ಲವೆ ? ಜನರನ್ನು ಕೊಂದಿಲ್ಲವೇ ? ಕೇವಲ ದಾಳಿ ಮಾಡುವುದು ವೈರಿಗಳನ್ನು ಕೊಲ್ಲುವ ವಿಷಯಗಳು ಮಾತ್ರ ಇತಿಹಾಸವೇ ? ಅದರಾಚೆಯಿರುವ ಆರ್ಥಿಕ,ಸಾಮಾಜಿಕ,ಸಾಂಸ್ಕೃತಿಕ ವಿಷಯಗಳು ಇತಿಹಾಸದ ವಿಷಯವಾಗಿ ಓದಬೇಕಲ್ಲವೇ ? ಒಂದು ಕಾಲಘಟ್ಟದ ಇತಿಹಾಸವೆಂದರೆ ಒಂದುದಿನ ನಡೆದ ಘಟನೆಗಳು ಮಾತ್ರವಲ್ಲ ,ಅದು ಎಲ್ಲ ರೀತಿಯ ಅಂಶಗಳನ್ನು ಸೇರಿ ಒಂದು ಕಾಲಘಟ್ಟದ ಇತಿಹಾಸ ನಿರ್ಮಿಸುತ್ತವೆ. ಟಿಪ್ಪು ಒಬ್ಬ ಇಸ್ಲಾಂ ಧರ್ಮದ ರಾಜ ಎಂದ ಮಾತ್ರಕ್ಕೆ ಇತಿಹಾಸ ಬದಲಾಯಿಸಲು ಬರುವುದಿಲ್ಲ.ಅದು ಒಳ್ಳೆಯದಿರಲಿ,ಕೆಟ್ಟದ್ದಿರಲಿ ಅದು ಇತಿಹಾಸದ ಭಾಗ ಅದನ್ನು ನಾವು ವಸ್ತುನಿಷ್ಠವಾಗಿ ಓದಬೇಕು,ವಿಶ್ಲೇಷಿಸಬೇಕು.ಅದನ್ನು ಬಿಟ್ಟು ಅವನು ಮುಸ್ಲಿಂ,ಹಿಂದೂಗಳ ಮೇಲೆ ದಾಳಿ ಮಾಡಿದ ,ಹಿಂದೂಗಳನ್ನು ಕೊಂದ ಎಂದು ಇತಿಹಾಸ ಪಠ್ಯದಿಂದ ಕೈಬಿಡುವುದು ಎಷ್ಟು ಸರಿ ? ಇತಿಹಾಸದ ಘಟನೆಗಳನ್ನು ದಾಖಲೆಗಳ ಆಧಾರದಿಂದ ವಸ್ತುನಿಷ್ಠವಾಗಿ ವಿಶ್ಲೇಷಣೆ ಮಾಡಬೇಕೆ ಹೊರತು ಯಾವುದೋ ಪಂಥಕ್ಕೆ ಜೋತುಬಿದ್ದು ಕುರುಡಾಗಿ,ನೈಜತೆಯನ್ನು ಮರೆಮಾಚಿ ಹುಸಿ ಸಂಕಥನಗಳನ್ನು ಸೃಷ್ಟಿಸುವುದಲ್ಲ. ಯಾಕೇ ಹೀಗಾಗುತ್ತಿದೆ ? ಇದಕ್ಕೇ ಕಾರಣ ಯಾರು ? ಈ ವಿಷಯ ರಾಜಕೀಯವಾಗುತ್ತಿರುವುದು ಯಾಕೆ? ಇದರ ಬಗ್ಗೆ ಮಾತನಾಡುವವರೆಲ್ಲ ನೈಜ ಇತಿಹಾಸ ಓದಿದ್ದಾರೆಯೆ ? ಪಠ್ಯದಿಂದ ಹೊರತೆಗೆಯುವ ತೀರ್ಮಾಣ ತೆಗೆದುಕೊಂಡವರು ಇತಿಹಾಸ ತಜ್ಞರೇ ? ಈ ಪ್ರಶ್ನೆಗಳು ನಮ್ಮನ್ನು ಕಾಡಿದರೆ ಉತ್ತರ ಸಿಕ್ಕಬಹುದೇನೋ .. ನಮ್ಮ ಅಜ್ಜನ ಇತಿಹಾಸವೇ ನಮಗೆ ಗೊತ್ತಿಲ್ಲ ..! ಹಿಂದಿನ ಘಟನೆಗಳನ್ನು ಹೆಕ್ಕಿ ತಿಪ್ಪೆ ಕೆದಕಿ ಜನರ ಮನಸ್ಸನ್ನು ಹಾಳು ಮಾಡುವುದು ಸರಿಯೇ ? ======================================================== ಪರಿಚಯ: ಜಮಖಂಡಿಯಲ್ಲಿಉಪಬ್ಯಾಸಕರು

ಚರ್ಚೆ Read Post »

ಇತರೆ

ಕನ್ನಡದ ಅಸ್ಮಿತೆ

ನಾಡ ದ್ವಜ ಯಾಕೆ ಬೇಕು? ಚಂದ್ರಪ್ರಭ ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ ತೋರುತಿಹುದು ಹೊಡೆದು ಹೊಡೆದು ಬಾನಿನಗಲ ಪಟ ಪಟ ಕಯ್ಯಾರ ಕಿಞ್ಞಣ್ಣ ರೈ ದೇಶ, ಭಾಷೆ, ಸಂಸ್ಕೃತಿ, ಸಂಪ್ರದಾಯ ಇತ್ಯಾದಿ ಎಲ್ಲವುಗಳ ಮೂಲ ನೆಲೆ ಅಸ್ಮಿತೆ. ಅಷ್ಟೇ ಅಲ್ಲ ಇವೆಲ್ಲ ಒಂದನ್ನೊಂದು ಪೂರಕವಾಗಿ ಪ್ರಭಾವಿಸುವ ಅಂಶಗಳು. ವ್ಯಕ್ತಿ, ವ್ಯಕ್ತಿಯ ಮನೆತನ, ಪ್ರದೇಶ ಎಲ್ಲಕ್ಕೂ ಒಂದು ಹೆಸರಿದೆ. ಹತ್ತಾರು ಸಂಗತಿಗಳನ್ನು ಹೇಳಿ ಬಿಡುವ ತಾಕತ್ತು ಆ ಒಂದು ಹೆಸರಿಗಿದೆ. ಗುರುತಿಸುವಿಕೆಯ ಇಂಥದ್ದೊಂದು ಅಂಶವಾಗಿ ಹುಟ್ಟಿದ್ದು ‘ಧ್ವಜ’ ಎಂಬ ಪರಿಕಲ್ಪನೆ. ಉರಗ ಪತಾಕ ಎಂದೊಡನೆ ತಟ್ಟನೆ ನೆನಪಾಗುವುದು ದುರ್ಯೋಧನ ಮತ್ತವನ ಛಲ. ಗರುಡಧ್ವಜನೆಂದಾಗ ಕೃಷ್ಣ, ಕಪಿಧ್ವಜನೆಂದಾಗ ಅರ್ಜುನ, ವರಾಹ ಧ್ವಜ ಅಂದಾಗ ವಿಜಯನಗರ ಸಾಮ್ರಾಜ್ಯ, ಭಗವಾ ಧ್ವಜ ಅಂದಾಗ ಮರಾಠಾ ಸಾಮ್ರಾಜ್ಯ ನೆನಪಿಗೆ ಬರುವುದು. ಧ್ವಜ, ಪತಾಕೆ, ಬಾವುಟ ಎಂದೆಲ್ಲ ಕರೆಸಿಕೊಳ್ಳುವ ಈ ಸಂಗತಿ ನಿರ್ದಿಷ್ಟ ಕಾರ್ಯೋದ್ದೇಶವನ್ನು ಸೂಚಿಸುತ್ತದೆ. ನಿರಂತರ ಎಲ್ಲರ ಲಕ್ಷ್ಯವನ್ನು ತನ್ನತ್ತ ಸೆಳೆದು ಗುರಿ ತಲುಪುವ ಸಂಕೇತವನ್ನು ಪ್ರತಿನಿಧಿಸುತ್ತದೆ. ಕೆಂಪು ಕೋಟೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಬೇಕೆಂಬ ಕನಸು ನನಸಾದ ಕ್ಷಣದ ಹಿಂದೆ ಏನೆಲ್ಲ ಹೋರಾಟ, ತ್ಯಾಗ, ಬಲಿದಾನಗಳಿವೆ.. ಕೆಲವಷ್ಟು ಮೊಳದ ಬಟ್ಟೆಯಾಗಿರದೇ ಇಡಿಯಾಗಿ ‘ಇಂಡಿಯಾ’ ವನ್ನು ಎಲ್ಲಾ ಗೌರವ, ಸ್ಥಾನ, ಮಾನ ಸಮ್ಮಾನಗಳ ಎತ್ತರದಲ್ಲಿ ನಿರೂಪಿಸುವ ಅಂಶವಾಗಿ ತ್ರಿವರ್ಣ ಧ್ವಜ ಪ್ರತಿಯೊಬ್ಬ ದೇಶವಾಸಿಯ ಎದೆಯಲ್ಲಿ ಸ್ಥಾನ ಪಡೆದಿದೆ. ಸ್ವಾತಂತ್ರ್ಯ ಪೂರ್ವದ ಸಂಸ್ಥಾನಿಕ ಅರಸರ ನಿಯಂತ್ರಣದಲ್ಲಿದ್ದ ಬಿಡಿ ಬಿಡಿ ಪ್ರದೇಶಗಳು ಇಡಿಯಾಗಿ “ಒಂದು ದೇಶ” ದ ಪರಿಕಲ್ಪನೆಯಡಿ ಬರುವಾಗಲೂ ಸಂಸ್ಥಾನಗಳು ಭಾಷೆ, ಸಂಸ್ಕೃತಿ ಇತ್ಯಾದಿ ಹಲವಾರು ಸಂಗತಿಗಳ ವಿಷಯದಲ್ಲಿ ತಮ್ಮತನವನ್ನು ಉಳಿಸಿಕೊಳ್ಳುತ್ತವೆ… ಅದರಲ್ಲಿ ಒಕ್ಕೂಟದ ಸಾಂಕೇತಿಕ ಪ್ರತಿನಿಧಿತ್ವದ ಹಸ್ತಕ್ಷೇಪ ಇರುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಿದ ಬಳಿಕವಷ್ಟೇ ಸಂಸ್ಥಾನಗಳ ವಿಲೀನ ಕಾರ್ಯ ಸಾಧ್ಯವಾಗಿದ್ದು ಮತ್ತು ಅಂದಿನ ಹಿರಿಯರ ನಿರಂತರ ಮನವೊಲಿಸುವ ಪ್ರಯತ್ನದಿಂದ ಅದು ನೆರವೇರಿದ್ದು. ಚಿಕ್ಕದೊಂದು ಉದಾಹರಣೆ ಈ ಸಂಗತಿಯನ್ನು ಪ್ರಸ್ತುತ ಪಡಿಸುವುದು – ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಗಳು ನಡೆದಿವೆ ಎಂದುಕೊಳ್ಳೋಣ. ಅಲ್ಲಿ ಒಂದು ಗುಂಪಿನವರು ತಮಿಳು ಧ್ವಜ ಎತ್ತಿ ಹಿಡಿದಿದ್ದಾರೆ, ಕೆಲವರು ಮಲಯಾಳ ಧ್ವಜ, ಮತ್ತೆ ಕೆಲವರು ಪಂಜಾಬಿ..ಇತ್ಯಾದಿ ಅನುಕ್ರಮವಾಗಿ ತಮ್ಮ ತಮ್ಮ ಧ್ವಜ ಹಿಡಿದು ನಿಂತಿರುವಾಗ ನೀವು ಎತ್ತಿ ಹಿಡಿಯುವ ಧ್ವಜ ಕನ್ನಡ ಧ್ವಜವೇ ಆಗಿರುತ್ತದೆ. ಅಖಂಡತೆಯ ಸೂಚಕ ಎಂಬ ಕಾರಣಕ್ಕೆ ಅಲ್ಲಿ ನೀವು ಭಾರತದ ಧ್ವಜ ಹಿಡಿಯಲಾಗದು. ಕನ್ನಡ ಧ್ವಜ ಎಂದಾಗ ಅದು ಬಸವಾದಿ ಶರಣರು, ಸೂಫಿ ಸಂತರು, ಚೆನ್ನಮ್ಮ-ಅಬ್ಬಕ್ಕ ರಂಥ ಧೀರ ರಾಣಿಯರು, ಟಿಪ್ಪು, ಒಡೆಯರ್ ಮೊದಲಾದ ರಾಜರು ; ಪಂಪ, ರನ್ನ ಪೊನ್ನರಿಂದ ಹಿಡಿದು ಕುವೆಂಪು, ಬೇಂದ್ರೆ ವರೆಗಿನ ಕವಿಗಳನ್ನು… ಅವರು ಬಿತ್ತಿ ಹೋದ ಮೌಲ್ಯಗಳನ್ನು ಪ್ರತಿನಿಧಿಸುತ್ತದೆ. ಕರ್ನಾಟಕದ ಇತಿಹಾಸ, ಪರಂಪರೆಯನ್ನು ಪ್ರತಿನಿಧಿಸುವ ಕನ್ನಡತನದ ಪ್ರತೀಕ ಕನ್ನಡ ಧ್ವಜ. ಶಾಂತಿ, ಸೌಹಾರ್ದತೆ ಕನ್ನಡಿಗರ ಮೂಲ ಗುಣ, ಸ್ವಭಾವ. ತನ್ನ ಇಂಥ ಮೌಲ್ಯಗಳ ಮೂಲಕವೇ ಕರ್ನಾಟಕ ಭಾರತೀಯತೆಯನ್ನು ಅಭಿವ್ಯಕ್ತಿಗೊಳಿಸುತ್ತ ಬಂದಿದೆ. ವಿವಿಧತೆಯಲ್ಲಿ ಏಕತೆ ಭಾರತದ ಹೆಗ್ಗಳಿಕೆ. ಭಾಷೆ, ಸಂಸ್ಕೃತಿ, ಆಚರಣೆಗಳಲ್ಲಿರುವ ವೈವಿಧ್ಯತೆ ಭಾರತದ ಅಂತಃಸತ್ವ.  ಈ ಜಾತ್ಯತೀತ ಸ್ವರೂಪ, ಬಹುತ್ವದ ನೆಲೆಯೇ ಭಾರತ ವಿಶ್ವಮಾನ್ಯವಾಗಲು ಕಾರಣವಾದ ಅಂಶವಾಗಿದೆ. ಈ ಅರ್ಥದಲ್ಲಿ ಭಾರತವೆಂದರೆ ನೂರಾರು ಸುಂದರ ಅಸ್ಮಿತೆಗಳ ಸಂಘಟಿತ ರೂಪ. ಎಲ್ಲ ರಾಜ್ಯಗಳೂ ತಮ್ಮತನವನ್ನು ಉಳಿಸಿಕೊಂಡೇ ಭಾರತೀಯತೆಯನ್ನು ಒಪ್ಪಿಕೊಂಡಿವೆ. ‘ಭಾರತ ಜನನಿಯ ತನುಜಾತೆ’ ಎಂದು ಬಣ್ಣಿಸುವಾಗ ಕುವೆಂಪು ನಿರೂಪಿಸುವುದು ಈ ಅಂಶವನ್ನೇ. ಆಯಾ ರಾಜ್ಯಗಳ ಭಾಷೆ, ಸಂಸ್ಕೃತಿ, ಪರಂಪರೆಯನ್ನು ಗೌರವಿಸುವುದು ಒಕ್ಕೂಟ ವ್ಯವಸ್ಥೆಯ ಹೊಣೆ ಮತ್ತು ನಿಜವಾದ ಭಾರತೀಯತೆಯ ಲಕ್ಷಣ. ರಾಜ್ಯಗಳು ರಾಷ್ಟ್ರ ಧ್ವಜದ ಅಡಿಯಲ್ಲಿ ತಮ್ಮ ಅಸ್ಮಿತೆಯ ಕುರುಹಾಗಿ ಸ್ವಂತ ಧ್ವಜ ಹೊಂದುವುದರಲ್ಲಿ ಎಂಥ ಅತಿರೇಕವೂ ಇಲ್ಲ. ರಾಜ್ಯೋತ್ಸವದ ಸಂದರ್ಭದಲ್ಲಿ ಆ ಧ್ವಜ ಹಾರಿಸುವುದರಲ್ಲಿ ಯಾವ ತಪ್ಪೂ ಇಲ್ಲ. ಈ ಧ್ವಜವನ್ನು ನಿರಾಕರಿಸಿ ಅಲ್ಲಿ ‘ಒಂದು ಧ್ವಜ’ ಪರಿಕಲ್ಪನೆಯನ್ನು ಹೇರುವ ಪ್ರಯತ್ನಗಳು ನಡೆದರೆ ಅದು ಪರೋಕ್ಷವಾಗಿ ಕರ್ನಾಟಕದ ಇತಿಹಾಸ, ಪರಂಪರೆಯನ್ನು ನಿರಾಕರಿಸುವುದೇ ಆಗಿದೆ. ಕನ್ನಡಿಗರು ಕನ್ನಡ ಧ್ವಜವನ್ನು ಪ್ರೀತಿಸಿದರೆ ಅದೊಂದು ಸಹಜ ಪ್ರಕ್ರಿಯೆ. ಅದನ್ನು ಪ್ರತಿಯೊಬ್ಬನೂ ಗೌರವಿಸಬೇಕು. =============================================

ಕನ್ನಡದ ಅಸ್ಮಿತೆ Read Post »

ಇತರೆ

ಅನುಭವ

ಭಯದ ನೆರಳಲ್ಲಿ ಹೆಬ್ರಿ ಸದಾನಂದ ಶೆಟ್ಟಿ ಭಯದ ನೆರಳಲ್ಲಿ ಕೈಯಲ್ಲಿ ಸಣ್ಣ ಬ್ಯಾಗ್ ಹಿಡಿದ ನಾನು ನನ್ನ ಭಾವಿ ಪತ್ನಿ ನೋಡೊ ಬರದಲ್ಲಿ ಹೆಜ್ಜೆ ಹಾಕಿದೆ 40 ನಿಮಿಷ ಕಳೆದ ನ೦ತರ ಮಾವನ ಮನೆ ನಾಯಿಗಳ ಬೊಗಳುವಿಕೆಗೆ ಚಿಮಿಣಿ ಹಿಡಿದು ಹೊರ ಬ೦ದಳು ನನ್ನ ಭಾವಿ ಪತ್ನಿ, ಕಗ್ಗತ್ತಲು ” ಯಾರದು ಜಾಗ್ರತೆ ನಾಯಿ ಕಚ್ಚುತ್ತೆ ”ಅ೦ದಾಗ ” ನಾನು ಕಣೆ” ಅ೦ದಾಗ ಆಕೆಗೆ ಸಣ್ಣವರಿದ್ದಾಗಲಿ೦ದ ಗೊತ್ತಿದ್ದರಿ೦ದ ಓಡಿ ಹೋಗಿ ನಾಯನ್ನು ಕಟ್ಟಿ, ತ೦ಗಿಯನ್ನುದ್ದೇಶಿಸಿ ” ರತ್ನ ನಿನ್ನ ಬಾವ ಬ೦ದಿದ್ದಾರೆ ಅಮ್ಮನಿಗೆ ಹೇಳು” ಅ೦ದವಳೆ ಒಳಗೆ ಹೋಗಿ ಮಾಯವಾದ್ಲು(ನಾಚಿಕೆ) ಹೊರ ಬ೦ದ ಅತ್ತೆಯವರು ”ಈಗ ಬ೦ದದ್ದಾ ಮಗ ಬಾ, ಬಚ್ಚಲಿಗೆ ಹೋಗಿ ಕೈಕಾಲು ಮುಖ ತೊಳೆದು ಕೊ೦ಡು ಬಾ” ಅ೦ದಾಗ ಅತ್ತೆಯ ಹಿ೦ದೆಯೇ ಬ೦ದ ನನ್ನ ಮಾವ ”ಮೊನ್ನೆ ಬ೦ದಿದ್ದೀಯ ಅನ್ನೋ ಸುದ್ದಿ ಇತ್ತು,ಈಗ ಬರೋದ” ಪ್ರೀತಿಯಿ೦ದ ಗದರಿದರು ”ಅಲ್ಲಿ ನಿಮ್ಮ ತ೦ಗಿಗೆ ಹುಷಾರಿರಲಿಲ್ಲಾ ಹಾಗೆ ನೋಡ್ಳಿಕ್ಕೆ ಬ೦ದದ್ದು” ಅ೦ದಾಗ ಅವರು ”ಹುಷರಿಲ್ಲಾ, ಒ೦ದು ಚೀಟಿ ಬಸ್ಸಲ್ಲಿ ಕೊಟ್ಟಿದ್ರೆ ವಿಷಯ ಗೊತ್ತಾಗಿ ನಾನು ಬರ್ತಿರ್ಲಿವಾ” ಅಷ್ಟರಲ್ಲಿ ಇಬ್ಬರಿಗೂ ಊಟಕ್ಕೆ ಬುಲಾವ್ ಇಬ್ಬರೂ ಊಟವಾದ ಮೇಲೆ ಮಲಗಿದೆವು ,ಬೆಳಿಗ್ಗೆ ನಾನು ಏಳುವಾಗ 8.00 ಘ೦ಟೆ ಎದ್ದವನೆ ”ಅತ್ತೆ ಮಾವ ಎಲ್ಲಿ” ಎ೦ದಾಗ ಅವರು ಅಕ್ಕನ್ನ(ನಮ್ಮ ತಾಯಿಯನ್ನು ಹಾಗೆ ಕರೆಯುವುದು ನಮ್ಮತ್ತೆಯ ವಾಡಿಕೆ) ನೋಡ್ಲಿಕ್ಕೆ ಬೆಳಿಗ್ಗೆ ಫ಼ಸ್ಟ್ ಬಸ್ಸಲ್ಲಿ ನಿಮ್ಮೂರಿಗೆ ಹೋಗಿದ್ದಾರೆ ನೀನು ನಾಲ್ಕು ದಿನ ಇಲ್ಲೆ ಇರಬೇಕ೦ತೆ ಅ೦ದಾಗ ”ಇಲ್ಲಾ ಅತ್ತೆ ನಾನು ಹೋಗ ಬೇಕು ರಜೆ ಹೆಚ್ಚಿಲ್ಲ”ಅ೦ತ ಸುಳ್ಳು ಬಿಟ್ಟೆ, ನಮ್ಮಿಬ್ಬರ ಮಾತು ಬಾಗಿಲ ಸ೦ದಿಯಲ್ಲಿ ನನ್ನವಳು ಕದ್ದು ಕೇಳ್ತಾಯಿದದ್ದು ನೋಡೀದೆ , ”ಸರಿ ಅತ್ತೆ ಈಗ ನಾನು ತೋಡಿಗೆ ಹೋಗಿ ಹಲ್ಲುಜ್ಜಿ ಬರ್ತೇನೆ ಅ೦ದವನೆ ಟವೆಲ್ ಹಿಡಿದು ಹೊರಟೆ ,ಹಲ್ಲುಜ್ಜಿ ತಿರುಗಿ ನೋಡ್ತೆ ,ಇವಳು ತ೦ಗಿ ಒಟ್ಟಿಗೆ ಕೊಡಪಾನ ಹಿಡುಕೊ೦ಡು ಹಾಜೂರ್,ನನ್ನ ನೋಡಿದ ನನ್ನಾಕೆ ತ೦ಗಿಯನ್ನುದ್ದೇಶಿಸಿ”ಹೇಳೇ ಹೇಳೆ ”ತ೦ಗಿಗೆ ಅಕ್ಕನ ತಾಕೀತು ಕೊನೆಗೆ ನಾನೆ ”ಎ೦ತ ಹೇಳೇ ರತ್ನ” ಅ೦ದ ಕೂಡ್ಲೆ ”ಭಾವ, ಭಾವ ಅಕ್ಕ ಹೇಳ್ತಾಳೆ ನೀವು ಎರಡು ದಿನ ಇರ್ಲೇ ಬೇಕ೦ತೆ” ಯಾಕ೦ತೆ” ಅ೦ದವನೇ ಟವಲ್ಲಿನಲ್ಲಿ ಮುಖ ಒರೆಸಿ ನೋಡ್ತೇನೆ ಅವರಿಬ್ಬರು ನೀರು ತು೦ಬಿಸಿ ಹೊರಟು ಹೋಗಿಯಾಗಿತ್ತು.

ಅನುಭವ Read Post »

ಇತರೆ

ಲಹರಿ

ಜೀವನ ಅನ್ನೋ ಸೈಕಲ್ ಶಂಭುಗೌಡ ಆರ್.ಜಿ. ಹುಟ್ಟೆಂಬುದ ಹುಟ್ಟಿದಾಗಿಂದ ಜೀವನ ಅನ್ನೋ ಸೈಕಲ್ ಹತ್ತಿ ಪೆಟಲ್ ತುಳ್ದಿದ್ದೋ ತುಳಿದಿದ್ದು…ಮಾರ್ಗ ಮಧ್ಯದಲ್ಲಿ ಹೆಸರಿಲ್ಲದ ಕಾಣದ ಕೈ ಒಂದು ಬೀಸಾಕಿದ ಬಿಕನಾಸಿ ಮುಳ್ಳು ಅಂಟಿಲ್ಲದಿದ್ದರೂ ಅಂಟ್ಕೊಂಡು ಪಂಚರ್ ಆಗಿ ಪಂಚರಂಗಿ ಟೈಟಲ್ ಇರೋ ಪಂಚರ್ ಅಂಗಡಿಯವರೆಗೂ ನಟರಾಜ ಸರ್ವಿಸ್ ನಲ್ಲಿ ನಡೆದು ರಿಪೇರಿ ಮಾಡಿಸಿ ಮತ್ತದೇ ಸೈಕಲ್ ಹತ್ತಿ ಕಾಣದ ಕನಸುಗಳ ಮೂಟೆಗಳನ್ನ ಹೊತ್ತು ಮತ್ತದೇ ಹೆಸರಿಲ್ಲದ ನನಸಿನ ನಗರಿಯತ್ತ ಪಯಣ ಶುರು.ಮಾರ್ಗ ಮಧ್ಯದಲ್ಲಿ ಬೇಟಿಯಾಗೋ ಅಪರಿಚಿತ ಮುಖಗಳನ್ನ ಪರಿಚಯಕ್ಕೂ ಪರಿಚಿತರಾದಾಗ ಸ್ನೇಹಿತರು ಅನ್ನೋ ಹಣೆಪಟ್ಟಿ ಕೊಟ್ಟು ಮಾಡಬೇಕಾಗಿರೋ ಕ್ಯಾಮೆಗಳಿಗೆಲ್ಲ ಸಾತ್ ಕೊಡ್ತಾ ಬಿಟ್ಟಿ ಬಿಕನಾಸಿ ಕನಸುಗಳಿಗೆಲ್ಲ ನನಸಿನ ಬಣ್ಣ ಹಚ್ಚೋ ಜಿದ್ದಿಗೆ ಬಿದ್ದು ನಾನ್ ಸ್ಟಾಪ್ ಜರ್ನಿ ಬೆನ್ನತ್ತಿ ರೂಲ್ಸ್ ಗಳಿರೋದೆ ಬ್ರೇಕ್ ಮಾಡೋಕೆ ಅನ್ನೋ ಮಾಡರ್ನ್ ಗಾಧೆಯನ್ನ ಜಪಿಸ್ತಾ ಸಿಗ್ನಲ್ ಜಂಪ್ ಮಾಡಿ ಗಾಡ್ ಅನ್ನೋ ಟ್ರಾಪಿಕ್ ಪೋಲಿಸ್ ಹತ್ರ ಸಿಕ್ ಹಾಕೊಂಡಾಗ ಹಿಂದಿರುಗಿ ನೋಡಿದ್ರೆ ಜೊತೆಗಿದ್ದವರು ಅಡ್ರಸ್ ಇಲ್ಲದಂಗೆ ಮಾಯಬಜಾರ್ ಅತ್ತ ಮುಖ ಮಾಡಿ ಮಾಯ ಆಗಿರ್ತಾರೆ. ಕಾಲಿಯಾಗಿರೋ ನಮ್ ಹಣೆ ಮೇಲೆ ಹೆಸರಿಲ್ಲದವ ಗೀಚಿ ಹೋದದ್ದು ಇದೇ ಇರಬಹುದೇನೋ ಅಂದ್ಕೊಂಡು ಜೇಬಲ್ಲಿದ್ದಷ್ಟು ಪೈನ್ ಕಟ್ಟಿ ಶಾತಂ ಪಾಪಂ ಅಂತ ನಮಗ ನಾವೇ ಕೆನ್ನೆಗೆ ಹೊಡೆಕೊಂಡು ತಿರುಗಿ ಬಂದು ಮತ್ತದೇ ಸೈಕಲ್ ಹತ್ತುವಾಗಲೇ ನಾವೆಲ್ಲಿಗೆ ಹೋಗಬೇಕಾಗಿತ್ತು ಅನ್ನೋ ಕಾಣದಿರೋ ಅಡ್ರಸ್ ಒಂದು ಕಾಣೋಕ ಶುರು ಆಗುತ್ತೆ ನೋಡಿ.ಆದ್ರೇನು ಪ್ರಯೋಜನ,ನಾವು ಹೋಗಬೇಕಾದ ಊರಿಂದ ನಾವಿರೋ ಊರು ಅದೆಷ್ಟೋ ಮೈಲುಗಟ್ಟಲೆ ದೂರ.ಹಿಂದಿರುಗಿ ನೋಡಿದ್ರೆ ಅಯ್ಯೋ ಸಾವು ಅನ್ನೋ ದಪ್ಪ ಅಕ್ಷರದಲ್ಲಿರೋ ಊರಿನ ಹೆಸರಿನ ಫಲಕ ಕಣ್ಣಿಗೆ ನಾಟೋ ತರ..ಭಯಾನಕ ಸನ್ನಿವೇಷದ ಪರದೆ ಯಾವ ದಾರಿ ಹಿಡಿದು ಬಂತೋ ಅದೇ ದಾರಿಯಲ್ಲಿ ಬಂದಷ್ಟೇ ವೇಗದಲ್ಲಿ ಮೈ ಕೊರಿಯೋ ಚಳಿಯಲ್ಲೂ ಬೆವರ ಹನಿಗಳ ಕಾಣಿಕೆ ಕೊಟ್ಟು ಕಾಣೆಯಾಗಿ ಬಿಡುತ್ತೆ.ಕೀಸೆಯಿಂದ ಕರ್ಚಿಪ್ ತೆಗೆದು ಬೆವರ ಹನಿಗಳನ್ನೆಲ್ಲ ಸಾವಕಾಶವಾಗಿ ನೇವರಿಸಿ ಅವುಗಳ ಮೈ ತೊಳೆದು ಅದೇ ಕರ್ಚಿಪ್ನಲ್ಲಿ ನೀಟಾಗಿ ಕೀಸೆಯಲ್ಲೆತ್ತಿಟ್ಕೊಂಡು ಬಂದ ದಾರಿಗೆ ಸುಂಕವಿಲ್ಲದವರಂತೆ ಕಣ್ ಮುಂದಿರೋ ದಾರಿ ಹಿಡಿದು ಜೀವನದಲ್ಲಿ ಆಡೋರ ಬಾಯಿಗೆ ಸಿಕ್ಕಿ ದಂಡಪಿಂಡ ಅನ್ನೋ ಬಿರುದಾಂಕಿತರಾಗೋ ಬದಲು ಹುಟ್ಟೆಂಬ ನೆಪ ದ ನೆನಪಾಗಿ ಏನಾದ್ರೂ ಒಸಿ ಕಿಸಿಯೋಣ ಅಂತ ಅಂದ್ಕಂಡು ಅಂದ್ಕೊಳ್ಳದೇ ಇರೋದನ್ನ ಲೈಪ್ ನಲ್ಲಿ ಅಂದ್ಕೊಂಡದ್ದಕ್ಕಿಂತ ಹೆಚ್ಚಾಗಿ ಕಾಣದಿರೋ ಕನಸನ್ನ ಕಸಿ ಮಾಡಿ ನನಸೆಂಬ ಹಣ್ಣನ್ನ ಕೈಯಲ್ಲಿ ಹಿಡಿದುಕೊಂಡು ವಿಜಯಶಾಲಿಯಾಗಿರೋ ಸಾರ್ಥಕತೆಯ ಭಾವ ನಮ್ಮೊಳಗೆ,ನಮ್ಮಷ್ಟಕ್ಕೆ ಮಾತ್ರ ಹುಟ್ಟಿದಂತೆ.ಸ್ವಲ್ಪ ವರುಷಗಳು ಹೊರಳಿದ ಮೇಲೆ ಜೀವನದಲ್ಲಿ ನಮಗಿಂತ ಹೆಚ್ಚಾಗಿ ಕಿಸಿದವರ ಪೋಟೋ ಪೇಪರ್ನಲ್ಲೋ, ಟೀವಿಯಲ್ಲೋ,ಅಕ್ಕ-ಪಕ್ಕದ ಮನೆಯವರ ನಾಲಿಗೆಯಲ್ಲಿ ಹೊರಳಾಡ್ತಿರೋದನ್ನ ಮುಚ್ಚಿಕೊಳ್ಳೋಕೆ ಬಾಗಿಲಿಲ್ಲದ ಕಿವಿಯಲ್ಲಿ ಇಷ್ಟ ಇರದಿದ್ದರೂ ಕಷ್ಟವಾಗದೇ ಸರಾಗವಾಗಿ ಕೇಳಿಸಿಕೊಂಡಾಗ ಚಾಪೆ ಸುತ್ತಿ ಹೊಡೆದಂಗಾಗಿರುತ್ತೆ.ಅವಾಗಲೇ ಗೊತ್ತಾಗಿದ್ದು ಜೀವನದಲ್ಲಿ ಯಾರೂ ಕಿಸಿಲಾರದ ಮಹಾನ್ ಏನನ್ನೂ ನಾವು ಕಿಸಿದಿಲ್ಲ ಅಂತ.ಮನುಷ್ಯನ ಈ ಸಹಜ ಯೋಚನೆಗೆ ಅಸೂಯೆ ಅಂತ ಕರಿಬೇಕೋ?? ಅಥವಾ ನಮ್ಮಷ್ಟಕ್ಕೆ ನಮಗೇ ಇರೋ ಅಸಮಧಾನ ಅಂತ ಕರಿಬೇಕೋ?? ಗೊತ್ತಿಲ್ಲ.ಆದ್ರೆ ಒಂದಂತೂ ಸತ್ಯ. ಅಂದ್ಕೊಂಡಂತೆ ಆದೋರು ಬೆರಳೆಣಿಕೆಯಾದರೆ ಅಂದ್ಕಂಡಿದ್ ಒಂದಾದ್ರೆ ಆಗಿದ್ದೇ ಮತ್ತೊಂದ್ ಅಂತಿರೋರು ಸಾಕಷ್ಟು. ಈ ರೀತಿಯ ಲೆಕ್ಕಾಚಾರದಲ್ಲಿ ನಾವೇನೋ ಒಂದು ಆಗಿದೀವಿ ಅನ್ನೋದನ್ನೇ ಮರೆತು ಬಿಟ್ಟಿರ್ತೀವಿ.ಪಾಲಿಗೆ ಬಂದಿದ್ ಪಂಚಾಮೃತ ಅಂತ ಕಣ್ಣಿಗ್ ಒತ್ಕಂಡು ನಮ್ಮಷ್ಟಕ್ಕೆ ನಾವ್ ನಮ್ಮದೆಷ್ಟೋ ಅಷ್ಟನ್ನ ನಮ್ಮ ಮತಿಯ ಮಿತಿಯೊಳಗೆ ಮಾಡ್ತಾ ಸಾಗಿದ್ರೆ ಈ ಜೀವನ ಸರಾಗವಾಗಿ ಸಾಗುತ್ತೆ.ಜೀವನ ಕಲ್ಪವೃಕ್ಷವಾಗುತ್ತದೆ.

ಲಹರಿ Read Post »

ಇತರೆ

ಚಿಂತನೆ

ಇಷ್ಟಕ್ಕೆ ಹೀಗೆ ವರಿ ಮಾಡೋದಾ? ಪಿ.ಎಂ.ಇಕ್ಭಾಲ್ ಕೈರಂಗಳ ಮಾನಸಿಕವಾದ ಸಮಸ್ಯೆಗಳೇ ಹಾಗೆ‌. ಬಲು ಸಂಕೀರ್ಣ.  ಹೀಗೇ ಇರುತ್ತದೆ ಎಂಬ ನಿಯಮವಿರಲ್ಲ.  ಒಂದೊಂದು ಸಮಸ್ಯೆಯೂ ವೈವಿಧ್ಯ. ಅವುಗಳ ತೀವ್ರತೆ ಎಷ್ಟು ಎಂದು ಅವುಗಳನ್ನು ಅನುಭವಿಸುವ ನತದೃಷ್ಟರಿಗೇನೇ ಗೊತ್ತು. ಆದರೆ ಒಂದು ನೆನಪಿರಲಿ. ‘ನನ್ನ ಸಮಸ್ಯೆಗೆ ಪರಿಹಾರವಿಲ್ಲ’ ಎಂದು ತಿಳಿದು ಹತಾಶರಾದರೆ ಸಮಸ್ಯೆಯ ವ್ಯಾಪ್ತಿ ಮತ್ತಷ್ಟು ದೊಡ್ಡದಾಗುತ್ತದೆ. ಮಾನಸಿಕವಾಗಿ ಅನುಭವಿಸುವ ನೋವು, ಕೊರಗು ಅಥವಾ ಒತ್ತಡ ಸಣ್ಣ ಸಮಸ್ಯೆಯೇನಲ್ಲ. ಇತರರಿಗಾಗಿ ಅವರ ವಿಷಯದ ಆಳಕ್ಕಿಳಿದು ವಸ್ತುನಿಷ್ಠವಾಗಿ ಚಿಂತಿಸಿ ಅರ್ಥೈಸಲು ಮುಂದೆ ಬರುವವರು ಕಡಿಮೆ. ನನಗೆ ಯಾರಿಲ್ಲ ಎಂಬ ಭಾವ ಸೇಡಾಗಿ ಕನ್ವರ್ಟು ಆಗಿ  ಹಿಂಸೆಗೆ ಇಳಿಯುವವರೂ ಇದ್ದಾರೆ.  ಆತ್ಮಹತ್ಯೆಯ ದಾರಿ ಹಿಡಿದವರೂ ಇದ್ದಾರೆ. ಇವೆರಡೂ  ಪರಿಹಾರ ಅಂತೂ ಅಲ್ಲ. ಸಮಸ್ಯೆ ಎಂದರೇನೇ ಹಾಗೆ‌, ತಡೆಯಲಾಗದು. ತಡೆಯಲಾಗದಿದ್ದರೇನೇ ಅದು ಸಮಸ್ಯೆ ಎನಿಸಿಕೊಳ್ಳುವುದು. ಆದರೆ ‘ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದೆ’ ಎಂದು ತಿಳಿದು ಪರಿಹಾರದತ್ತ ಯೋಚಿಸುವುದು ಮತ್ತು ಪ್ರಯತ್ನಿಸುವುದು ಪ್ರಬುದ್ಧತೆ. ಆಗ ಅಷ್ಟರವರೆಗೆ ನಾವಿರುವುದಕ್ಕಿಂತ ಹೆಚ್ಚಿನ ತಾಳ್ಮೆಯನ್ನು ಹೊರತರಬೇಕಾಗುತ್ತದೆ.  ಮನಸ್ಸನ್ನು ವಿಶಾಲಗೊಳಿಸಬೇಕಾಗುತ್ತದೆ. ವಿಷಯವನ್ನು ಬೇರೆ ಬೇರೆ ಕೋನಗಳಿಂದ ನೋಡುವ ಸಾಮರ್ಥ್ಯವನ್ನು ಹೊರಗೆ ತರಬೇಕಾಗುತ್ತದೆ. ಹಾಗೆ ಮಾಡಿಯೂ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲತೆ ಕಾಣಬಹುದು. ಆಗ  ಮರಳಿಯತ್ನ ಮಾಡಬೇಕು. ಪ್ರಧಾನ ವಿಷಯ ಏನು ಅಂದರೆ, ಇನ್ನಿಲ್ಲದಂತೆ ಕಾಟ ಕೊಡುತ್ತಿದ್ದ ಸಮಸ್ಯೆಯೊಂದು ಎದ್ದು ಹೋಗುವಾಗ ಅದು ಒಮ್ಮೆ ದೊಡ್ಡದಾದಂತೆ ಕಾಣಬಹುದು.  ಹಾಗಾಗುವುದು ಪರಿಹಾರದ ಒಂದು ಹಂತವಾಗಿರಬಹುದು. ಆ ಹಂತವನ್ನೇ ದೊಡ್ಡ ಸಮಸ್ಯೆಯಾಗಿ ಕಾಣಬಾರದು. ಹಾಗೆ ಹತಾಶೆ ಆದರೆ ಅದರ ಬೀಳ್ಕೊಡುವಿಕೆ ಪ್ರೊಗ್ರಾಮು ಕ್ಯಾನ್ಸಲ್ ಆಗಿಬಿಡಬಹುದು!ಎಷ್ಟೋ ಮಂದಿ ಈ ತಪ್ಪನ್ನು ಮಾಡುತ್ತಾರೆ. ಆ ಮೂಲಕ ಸಮಸ್ಯೆಗೆ ದೀರ್ಘಾಯಸ್ಸು ಕರುಣಿಸುತ್ತಾರೆ. ಇಬ್ಬರ ನಡುವಿನ ಮನಸ್ತಾಪ ಒಂದು ಸಮಸ್ಯೆಯಾದರೆ, ಒಂದೆಡೆ ಕೂತು ಸಾಧ್ಯತೆಯ ಪರಮಾವಧಿ ತಾಳ್ಮೆಯಿಂದ ಪರಸ್ಪರ ಮಾತಾಡೋದು  ಪರಿಹಾರದ ಹಂತ. ಆ ಹಂತವು ಒಂದಷ್ಟು ಕಷ್ಟಾನೇ. ಆದರೆ ಆ ಸಮಸ್ಯೆಗೆ‌ ಅದೇ ಪರಿಹಾರದದ  ಹಂತ. ಅದಲ್ಲದೆ ಬೇರೆ ಪರಿಹಾರವೇ ಇಲ್ಲ. ಅದರಿಂದ ಎಸ್ಕೇಪು ಆದಷ್ಟೂ ಆ ಸಮಸ್ಯೆ ಜೀವಂತ. ಕೆಲವೊಮ್ಮೆ ಅನಾಹುತಕ್ಕೇ ಅವಕಾಶ. ರೋಗಪೀಡಿತನಾಗುವುದು ಸಮಸ್ಯೆ. ಕೆಲವೊಮ್ಮೆ  ಅಡ್ಮಿಟು, ಇಂಜಕ್ಷನು, ಐಸಿಯು, ಅಪರೇಷನು, ಲಕ್ಷಾಂತರ ಖರ್ಚು ಇವೆಲ್ಲಾ ಅದರ ಪರಿಹಾರದ ಹಂತವಾಗುತ್ತದೆ. ಆ ಹಂತವನ್ನೇ ಸಮಸ್ಯೆಯಾಗಿ ಕಂಡು ಅದರಿಂದ ಎಸ್ಕೇಪು ಆದಷ್ಟೂ ಸಮಸ್ಯೆಯು ಜೋರಾಗುತ್ತದೆ. ರೋಗಿ ಸಾಯಬಹುದು. ಪರಿಹಾರದ ಹಂತದಲ್ಲಿ ಅಣುವಿನಷ್ಟೂ  ಹತಾಶೆರಾಗಬಾರದು. ಅಗತ್ಯವಿದ್ದರೆ ಸಹೃದಯರಾದ ಇನ್ನೊಬ್ಬರದ್ದೋ ಹೆಚ್ಚಿನವರದ್ದೋ ಸಹಾಯ ಪಡೆಯಬೇಕು. ಸಮಸ್ಯೆಯೆಯೇ ಹಾಗೆ. ಅದು ಮನುಷ್ಯನನ್ನು ಒಂಟಿ ಮಾಡುತ್ತದೆ. ಒಂದು ಉದಾಹರಣೆ ನೊಡಿ. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದದ್ದಕ್ಕೆ ಆತ್ಮಹತ್ಯೆ ಮಾಡೋಕೆ ಆಲೊಚಿಸುವ ಎಸ್ಸೆಸೆಲ್ಸಿಯ ತಂಗಿಯನ್ನು ನೋಡಿ ಎಂಬಿಬಿಎಸ್ ಕಲಿಯುವ ಅಕ್ಕ ನಕ್ಕಳು. ತಾಯಿ, ತಂದೇನೂ ಆ ನಗುವಿಗೆ ಜೊತೆಗೂಡಿದರು. ಅವರಿಗೆಲ್ಲ ಅವಳು Silly ಹುಡುಗಿ ಎಂದೆನಿಸಿತು. ‘ಇಷ್ಟಕೇ ಹೀಗೆ ವರಿ ಆಗೋದಾ’ ಎಂದು  ಕೇಳಿದರು. ಇದೆಲ್ಲ ವರಿ ಮಾಡ್ಕೊಬೇಕಾದ ವಿಷಯವಾಗಿ ಅಕ್ಕನಿಗೆ, ಅಮ್ಮನಿಗೆ ಮತ್ತು ಅಪ್ಪನಿಗೆ ಕಾಣಲಿಲ್ಲ.  ಅದೇ ಅಕ್ಕ ಒಂದು ದಿನ ಹತಾಶಳಾಗಿ ಕೂರುತ್ತಾಳೆ.   ಸಹಪಾಟಿಯೊಬ್ಬನ ಇನ್ಸಲ್ಟು ಅವಳ ಮನ ಕೊರೆಯುತ್ತಿತ್ತು. ಕಣ್ಣು ಜಲಾಶಯವಾಗುತ್ತಿತ್ತು. ‘ಇಷ್ಟಕ್ಕೇ ಇಷ್ಟೆಲ್ಲ ವರಿನಾ’ ಎಂದು ತಂಗಿ, ತಾಯಿ, ಅಪ್ಪ ಅಂದುಕೊಂಡರು. ಮನಸ್ಸು ಗಟ್ಟಿಯಿರಬೇಕು ಎಂದು  ಉಪದೇಶ ಹೇಳಿದರು. ಮುಂದೊಂದು ದಿನ ತಾಯಿಯ ಸರದಿ. ಜಗಳವೊಂದರ ಮಧ್ಯೆ ಗಂಡ ‘ನಿನ್ನನು ಮದುವೆಯಾಗಿ ತಪ್ಪು ಮಾಡಿದೆ’ ಎಂದ  ಮಾತೊಂದು ಬಾಣವಾಗಿ ನಾಟಿ ಅವಳ ಎದೆಯನ್ನು ನೋಯಿಸುತ್ತಿತ್ತು. ‘ಹೀಗೆಲ್ಲ ಹೇಳಲೇಬಾರದಿತ್ತು ನಿಮ್ಮಪ್ಪ’ ಎಂದು ಮಕ್ಕಳಲ್ಲಿ ಅಳಲು ಶುರುವಿಟ್ಟುಕೊಂಡಳು.  ‘Silly mom’ ಎಂದು ಮಕ್ಕಳ ನಗು. ‘ತುಂಬಾ ವೀಕು’ ಎಂಬ ಗಂಡನ ಸರ್ಟಿಫಿಕೇಟು. ಒಂದು ದಿನ ಯಜಮಾನನೇ ಮಂಕು. ಸೋತುಬಿಟ್ಟೆ, ಇನ್ನು ಜಯವಿಲ್ಲ ಎಂಬ ಹತಾಶೆಯಲ್ಲಿ ಬಿದ್ದ. ಬಿಸಿನೆಸ್ಸಲ್ಲಿ ಆದ ಲಾಸು ಕಾಸು ಬರಿದು ಮಾಡಿಬಿಟ್ಟಾಗ ಆತ ಹಾಗಾದ. ಯಾಕೊ ಉಮ್ಮಳಿಸಿ ಬರುವ ದುಖವನ್ನು ತಡೆಹಿಡಿಯಲಾಗದೆ ಹೆಂಡ್ತಿ ಮಕ್ಕಳ ಮುಂದೆ ಮಗುವಾದ. ‘ಅಯ್ಯೋ ಅಪ್ಪ, ಇದೆಲ್ಲ ಮಾಮೂಲು. ಹತಾಶೆಯಾಗುವಂತದೇ ಅಲ್ಲ’  ಮಕ್ಕಳ ಪ್ರತಿಕ್ರಿಯೆ. ಹೆಂಡ್ತಿಗೂ ಗಂಡ ಅಷ್ಟು ದುಖ ಪಡುವಷ್ಟು Silly fellow ಆದುದಕ್ಕೆ ಸಹಮತ ಇಲ್ಲ. ಇಲ್ಲಿ ಎಲ್ಲರೂ ತೋರಿಸಿದ್ದು ಒಂದೇ ಸ್ವಭಾವ. ಇನ್ನೊಬ್ಬರ ಮಾನಸಿಕ ಸನಸ್ಯೆಗಳನ್ನು ತಮ್ಮ ಭಾಗದಿಂದ ಮಾತ್ರ ನೋಡಿದ್ದು.ಯಾರಿಗೆ ಯಾರೂ ಜೊತೆಯಾಗದೆನೇ ವರಿ ಮಾಡದಿರಲು ಉಪದೇಶಿಸಿದ್ದು. ‘ಹೌದು ಇದು ನೋವಾಗುವಂತಹದೇ ವಿಷಯ, ನನಗೆ ಅರ್ಥವಾಗುತ್ತೆ, ಸಮಾಧಾನ ಪಡು’ ಎಂದು ಯಾರೂ ಹೇಳಿಲ್ಲ. ಹೇಳಿದ್ದು, ‘ಇದು ನೋವಾಗೋ ಮ್ಯಾಟರೇ ಅಲ್ಲ’ ಎಂದು. ಸಮಸ್ಯೆಯಲ್ಲಿ ಬಿದ್ದಾಗ ಒಬ್ನೊಬ್ಬರೂ ಒಂಟಿಯಾಗಿದ್ದರು. ಒಬ್ಬರ ಸಮಸ್ಯೆ ಇನ್ನೊಬ್ನರಿಗೆ ಏನೂ ಅಲ್ಲ. ಹೆಚ್ಚಿನವರು ಇನ್ನೊಬ್ನರ ಸಮಸ್ಯೆಯನ್ನು ಮೇಲಿನ ಉದಾಹರಣೆಯಂತೆ ತಮ್ಮ ಕೋನದಿಂದ ಮಾತ್ರ ನೋಡುತ್ತಾರೆ. ಸಮಸ್ಯೆಯಲ್ಲಿ ಬಿದ್ದವರಿಗೆ ಅದು ಕೊಡುತ್ತಿರುವ ಯಾತನೆ, ಪರಿಣಾಮವು ಇನ್ನೊಬ್ಬರ ಪಾಲಿಗೆ ನಗಣ್ಯ. ಬಾಂಧವ್ಯವು ಕೂಡ ಹಳಸಿ ಹೋಗೋದು ಆಗಲೇ. ಸಮಸ್ಯೆಯನ್ನು ಅದನ್ನು ಅನುಭವಿಸುವವರ ಕೊನದಿಂದ ನೋಡಬೇಕು. ಹಾಗೆ ಮಾಡುವಷ್ಟು ನಾವು ಬೆಳೆಯಬೇಕು. ಅದವರಿಗೆ ಕೊಡುವ ನೋವನ್ನು ಅರ್ಥಮಾಡಿ  ‘ಅರ್ಥಮಾಡಿದ್ದೇನೆ’ ಎಂಬುದನ್ನು ಅವರಿಗೆ ತಿಳಿಸಬೇಕು. ಆಗ ಅದವರಿಗೆ ಮಹದುಪಕಾರ ಆಗುತ್ತದೆ. ಅವರು ಅನುಭವಿಸುವ ನೋವಿನ ಅಲೆಗಳ ಆರ್ಭಟ ಕಡಿಮೆ ಆಗುತ್ತದೆ. ಹಾಗೆ ಮಾಡಿದರೆ ಬಾಂಧವ್ಯಕ್ಕೆ ಟಾನಿಕ್ಕು. ಎಲ್ಲ ಸಮಸ್ಯೆಗಳೂ ಅನುಭವಿಸುವವರ ವೀಕುನೆಸ್ಸಿನಿಂದಾಗಿ  ದೊಡ್ಡದಾಗುವುದಲ್ಲ. ಹಾಗೆ ನೋಡೋದಾದರೆ ಕೆಲವು ವಿಷಯಗಳಲ್ಲಿ ಎಲ್ಲರೂ ವೀಕೇ. ತಿಳಿದಿರಲಿ, ಕೆಲವು ಸಮಸ್ಯೆ ಅಂತೂ ದೊಡ್ಡದೇ. ಇನ್ನೊಬ್ಬರ ಪಾಲಿಗೆ ಏನೂ ಅಲ್ಲದ ವಿಷಯದೊಳಗಡೆ ಒಂದು ಲೋಕವೇ ಅವಿತುಕೊಂಡಿರುತ್ತದೆ. ಅದನ್ನು ಅರಿಯಲು ಸಮಸ್ಯೆ ಅನುಭವಿಸುವವರ ಭಾಗದಿಂದ ವಿಷಯವನ್ನು ಅಧ್ಯಯನ ಮಾಡಬೇಕಾಗುತ್ತದೆ. ಹೃದಯ ವಿಶಾಲತೆ ಇದ್ದರೇನೇ ಅದು ಸಾಧ್ಯ. ಇನ್ನೊಬ್ಬರ ಸ್ಥಾನದಲ್ಲಿ ನಿಂತು ಅದನ್ನು ನೋಡಲು ತಯಾರಿರೋರು ಕಡಿಮೆ. ಕೆಲವು ಸಮಸ್ಯೆಗಳು ಇನ್ನೊಬ್ಬರ  ಭಾವನಾತ್ಮಕ ಸಾಮೀಪ್ಯಕ್ಕೆ ಮಂಜಿನಂತೆ ಕರಗಿಹೋಗುವಂತಹದ್ದು. ಅಂತಹವರು ಒಂದಷ್ಟು ಇದ್ದರೆ ಈ ಜಗದ ಆತ್ಮಹತ್ಯೆಗಳ ಪ್ರಮಾಣ ಕಡಿಮೆಯಾಗುತ್ತಿತ್ತು. ಸಮಸ್ಯೆಗೆ ಬಿದ್ದ ವ್ಯಕ್ತಿಗಳ ಭಾಗದಿಂದ ವಿಷಯವನ್ನು ನೋಡಲು ಅವರ ಆಪ್ತರೇ ತಯಾರಿರೋದಿಲ್ಲ. ಯಾವ ವ್ಯಕ್ತಿ ಸಕ್ಸಸು ಆಗಿದ್ದರೆ ಯಾರಿಗೆ ಲಾಜಿಕ್ ಬಿಟ್ಟು ಮನ-ಹಣದಿಂದ ಸಹಾಯ ಮಾಡಿ, ಕಣ್ಣರೆಪ್ಪೆಯಂತೆ ಅವರನ್ನು ಕಾಯುತ್ತಿದ್ದನೋ, ಆ ವ್ಯಕ್ತಿಯೇ ಯಾರದೋ ಸ್ವಾರ್ಥಕ್ಕೆ ಬಲಿಯಾಗಿಯೋ, ವಿಧಿಯಾಟಕ್ಕೆ ಸಿಳುಕಿಯೋ ಸೂಕ್ಷ್ಮವಾದೊಂದು ಮನಸಿನ ಸಮಸ್ಯೆಯಲ್ಲಿ ಬಿದ್ದರೆ  ಅವನಿಗೆ ಅವರೇ ಇರುವುದಿಲ್ಲ. ಸಮಸ್ಯೆಗೆ ಬಿದ್ದವರಿಗೆ ಒಂಟಿತನವು ಬೋನಸ್ಸು. ಎಷ್ಟೊ ಆತ್ಮಹತ್ಯೆಗಳು ನಡೆಯುವುದು ಅವರ ಸಮಸ್ಯೆಯಿಂದಲ್ಲ, ಆ ಸಮಸ್ಯೆ ಅವರಿಗೆ ಬೋನಸ್ಸಾಗಿ ಕೊಟ್ಟ ಲೋನ್ಲಿನೆಸ್ಸಿನ ಕಾರಣಕ್ಕಾಗಿ. ಈ ಪಾಯಿಂಟು  ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದು. ಸಮಸ್ಯೆಗಳಲ್ಲಿ ಬೀಳದ ವ್ಯಕ್ತಿಗಳಿಲ್ಲ. ಕೆಲವು ಮೇಲೆ ಉದಾಹರಿಸಿದಂತಹುಗಳು. ಗಾಳಿ ಮಳೆಯಂತಹವು, ತಾತ್ಕಾಲಿಕ. ಕೆಲವು ಸುಂಟರಗಾಳಿಗಳಂತಹದೇ ಇರುತ್ತದೆ. ತೀವ್ರತೆ ಹೆಚ್ಚು. ಕೆಲವು ಅಂತೂ ಪಕ್ಕಾ ಸುನಾಮಿ ಅಲೆಗಳೇ. ಕೆಲವು ಸಮಸ್ಯೆಗಳು ತನ್ನಿಂದ ತಾನೇ ಪ್ರಭಾವ ಕಡಿಮೆಗೊಳಿಸಿದೆ ಎನಿಸುವುದು ಇದೆ. ಒಬ್ಬ ಸಂತನ ಬಳಿ ಒಬ್ಬ ಸಮಸ್ಯೆಯೊಂದನ್ನು ಹೇಳಿ ಗೋಳೋ ಎಂದು ಅತ್ತುಬಿಟ್ನನಂತೆ. ಸಂತ ಹೇಳಿದನಂತೆ, “ಒಂದಾರು ತಿಂಗಳು ಕಳೀಲಿ. ನಿನ್ನ ಅಳು ಮಾಯವಾಗುತ್ತದೆ” ಎಂದು. ಅವನು ಕೇಳಿದನಂತೆ, “ಆರು ತಿಂಗಳಲ್ಲಿ ನನ್ನ ಸಮಸ್ಯೆ ಇಲ್ಲವಾಗುತ್ತಾ” ಎಂದು. ಸಂತನ ಉತ್ತರ, “ಇಲ್ಲ. ಆರು ತಿಂಗಳಲ್ಲಿ  ನಿನಗೆ ಇದು ಅಭ್ಯಾಸವಾಗುತ್ತದೆ!” ಕೆಲವು ಸಮಸ್ಯೆಗಳ ಆರಂಭದಲ್ಲಿ ಮನುಷ್ಯ ಪೇಚಾಡುತ್ತಾನೆ. ಜೀವಿಸೋಕೆ‌ ಆಗಲ್ಲ ಎಂಬಂತಾಗುತ್ತಾನೆ. ಕ್ರಮೇಣ ಆ ಸಮಸ್ಯೆ ಅಭ್ಯಾಸವಾಗಿ ಸಮಸ್ಯೆನೇ ಬಲಹೀನಗೊಂಡಂತಾಗುತ್ತದೆ. ಎಲ್ಲ ಸಮಸ್ಯೆಗಳಿಗೆ ಪರಿಹಾರವಿದ್ದೇ ಇದೆ. ಅಥವಾ ಹಾಗಂತನೇ ನಾವು ತಿಳಿದುಕೊಳ್ಳಬೇಕು. ಆದರೆ ಕೆಲವೊಮ್ಮೆ ಪರಿಹಾರ  ಎಂಬ ಅಸಾಮಿಯು ಪ್ರಬಲ ಇಚ್ಛಾಶಕ್ತಿ, ಅಪಾರ ತಾಳ್ಮೆ, ಬುದ್ಧಿಮತ್ತೆ ಮತ್ತು ಕಾಲಾವಕಾಶವನ್ನು ನಮ್ಮಿಂದ  ಬಯಸುತ್ತಾನೆ. ಅದ್ಯಾತ್ಮಲೋಕದಲ್ಲಿ ತನ್ನನ್ನು ತೊಡಗಿಸಿಕೊಳ್ಳೋದೂ  ಸಮಸ್ಯೆಗಳ ತೀವ್ರತೆಯನ್ನು ಕಡಿಮೆಗೊಳಿಸುತ್ತದೆ. ಆಗ ಮನ ರಿಲಾಕ್ಸು ಆಗಿ ಪರಿಹಾರದ ಬಾಗಿಲು ತೆರೆಯೋದೂ ಇದೆ. ಅದಕ್ಕೇ‌ ಪಕ್ಕಾ ನಾಸ್ತಿಕ ಸೈಕಾಲಜಿ ಡಾಕ್ಟರೂ ದೇವರನ್ನು ಬಳಿ ಕೂರಿಸಲು ಸಲಹೆ ನೀಡೋದು. ಇನ್ನೊಬ್ಬರ ಪಾಲಿಗೆ ವಿಪರೀತ, ಸಹಿಸಲಾಗದು ಎಂದೆನಿಸಿದ  ಮಾನಸಿಕ ಕೊರಗು, ನೋವನ್ನು ಪರಿಗಣನೆಗೆ ಅರ್ಹ ಎಂದೇ ತಿಳಿಯಬೇಕು. ಅದೆಷ್ಟು ಸಣ್ಣದೇ ಇರಲಿ, ‘ನಮ್ಮ ಭಾಗಕ್ಕೆ ಮಾತ್ರ ಅದು ಸಣ್ಣದು, ಅವರ ಭಾಗಕ್ಕೆ ಸಣ್ಣದಲ್ಲ’ ಎಂದು ತಿಳಿಯಬೇಕು.  ಅವರ ಭಾಗದಿಂದ ವಿಷಯವನ್ನು ನೋಡಿ, ಅರ್ಥೈಸಿ ‘ಅರ್ಥಮಾಡಿದ್ದೇನೆ’ ಎಂದು ಹೇಳಬೇಕು. ಸಮಾಧಾನ ಹೇಳಬೇಕು. ಪರಿಹಾರಕ್ಕೆ ಮುಂದಾಗಬೇಕು. ಇಷ್ಟು ಮಾತ್ರ ಮಾಡದೆ ಬೇರೇನೂ ಮಾಡಿದರೂ ಸಾಕಾಗದು. ಇಷ್ಟು ಮಾಡಲಾಗದ ಹತ್ತಿರದವರು, ಬಂಧುಗಳು ಹೃದಯಹೀನರೇ ಸರಿ‌. ನಾವು ಹಾಗಾಗದಿರೋಣ. ===============================================

ಚಿಂತನೆ Read Post »

You cannot copy content of this page

Scroll to Top