ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ “ಮೌನ ಸರೋವರ”
ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ಮೌನ ಸರೋವರ” ಬಾಲ್ಯದ ಬೆಳಗಿನ ಹೊತ್ತಿನಲ್ಲಿನೀಲಿ ನೀರಿನ ನಿಶ್ಶಬ್ದ,ಪ್ರಶ್ನೆಯೇ ಅರಳದ ದಿನಗಳು,ಉತ್ತರವೇ ಕೇಳದ ಕಾಲ. ಆಕಾಶ ತಬ್ಬಿದ ಸರೋವರ,ಆಟದ ಕಲ್ಲು ಬಿದ್ದರೂನಗು ತೇಲಿ ಹೋದಿತುಮಸುಕು ಮನದವರೆಗೂ ತಲುಪಲಿಲ್ಲ. ಕಾಲ ನಡೆದು ದಾರಿಯಾದಂತೆಹೆಜ್ಜೆಗಳು ಬಂತು ಹಲವು,ಕೆಲವು ನೀರು ತಂದವು,ಕೆಲವು ಮಣ್ಣು ಸುರಿದವು. ನೋವುಗಳು ಇಳಿದವುನೀರಿನ ಆಳದೊಳಗೆ,ಮಾತಿಲ್ಲದೆ ಕುಳಿತವುಸರೋವರದ ಹೃದಯದಲ್ಲಿ. ಭೇದದ ಮೊದಲ ಸ್ಪರ್ಶಅಲೆ ಎಬ್ಬಿಸಿತು,ಹೊರಗೆ ಕದಲಿಕೆ,ಒಳಗೆ ಮೌನ ಗಾಯ. ಸರೋವರ ಮಾತಾಡಲಿಲ್ಲ,ಮೌನವೇ ಅದರ ನಾಡಿ,ಧ್ವನಿಯಿಲ್ಲದ ನೋವೇನೀರಿನ ಭಾಷೆ. ಸಮಾಜ ಬಂದು ನಿಂತುಬಣ್ಣ ಮಾತ್ರ ನೋಡಿತು,ಆಳ ಕೇಳದೆ ತೀರ್ಪುನೀರಿನ ಮೇಲೆ ಬರೆದಿತು. ಬಿರುಗಾಳಿ ಬೀಸಿದರೂನೀರನ್ನೇ ತಪ್ಪೆಂದರೂ,ಮೇಲ್ಮೈ ಕದಡಿದರೂಆಳ ಮಾತ್ರ ನಿಂತಿತು. ಸಂಧ್ಯದ ಹೊತ್ತಿನಲ್ಲಿನೀರು ಕಡಿಮೆಯಾಯಿತು,ಆಳ ಹೆಚ್ಚಾಯಿತು,ಅರ್ಥಗಳು ಗಾಢವಾದವು. ಅಲೆಗಳು ಮೌನವಾಯಿತು,ಹೇಳದ ಕಥೆಗಳುನೀರಿನೊಳಗೆನೆಲೆಯಾದವು. ಆಕಾಶ ಬಿದ್ದರೆ ಹಿಡಿಯುವೆ,ಹೂ ಬಿದ್ದರೆ ಕಾಪಾಡುವೆ,ಕಲ್ಲು ಬಿದ್ದರೂನೀರಾಗಿಯೇ ಇರುವೆ. ಮೌನ ಸರೋವರಕಲ್ಲುಗಳನ್ನು ಕ್ಷಮಿಸಿದ ನೀರು,ಬಿರುಗಾಳಿಗೆ ಸಾಕ್ಷಿಯಾದ ಆಳ,ತೋರಿಸದೆ ಹೊತ್ತ ನೋವು. ಮಾತಿಲ್ಲದೆ ಉಳಿದ ಸಹನೆ,ಒಡೆಯದೆ ನಿಂತ ಶಕ್ತಿಅದೇ ಬದುಕಿನಮೌನ ಸಾರ. ಡಾ. ಹೆಚ್. ನಟರಾಜ್ ಆರ್ಯ.
ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ “ಮೌನ ಸರೋವರ” Read Post »









