ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಗಾಯತ್ರಿ ರವಿ. ಹುಬ್ಬಳ್ಳಿ ಅವರ ಕವಿತೆ “ಗಾಂಧಿ ನೋಟು”

ಕಾವ್ಯ ಸಂಗಾತಿ ಗಾಯತ್ರಿ ರವಿ. ಹುಬ್ಬಳ್ಳಿ “ಗಾಂಧಿ ನೋಟು”  ಕಚೇರಿಯ ಖಜಾನೆಯಲ್ಲಿ ಗಾಂಧಿ ನೋಟಿನದೇ ದರ್ಬಾರು ಹೊಸ ನೋಟುಗಳು  ಬಂದರೆನೋಟವೆಲ್ಲ ಅವನೆಡೆಗೆ ಸೂಸುವ ನೋಟಿನ ಸುವಾಸನೆ  ಒಂದೇ ದಾರದಲ್ಲಿ ನೂರರ ಕಟ್ಟು ಈಗಷ್ಟೇ  ಜನ್ಮತಳೆದ ಎದ್ದೇಳಲು  ಓಲಾಡುವ ಎಳೆಗರುವಿನ  ನೊಸಲು  ಲೆಕ್ಕ ಒಪ್ಪಿಸುವಾಗ ಹೆಚ್ಚಿಗೆ ಬಂದರೆ ತಪ್ಪಿದೆ ಅಂತಲೇ ಅರ್ಥ  ಕಡಿಮೆಯಾದರೆ ಮತ್ತೆ ಮತ್ತೆ ಎಣಿಸುವ ಯಂತ್ರದ ಬಾಯಿಂದ ಹೊರಗೆ ಬರುವ  ಅಲ್ಲಿಯೂ ಸರಿಯಾಗಲಿಲ್ಲವೆಂದರೆ ಕೈಯಿಂದ ಒಂದೊಂದೇ ನೋಟನ್ನು ಎತ್ತಿ ಎತ್ತಿ ಹಾಕುವುದು  ಒಂದೊಮ್ಮೆಹರಿದ ನೋಟಿಗೆ  ಹಾಳೆಯ ತುಂಡರಿಸಿ ಹದವಾಗಿ ಹಚ್ಚಿ ಆಪರೇಷನ್ ಮಾಡಿದ್ದುಉಂಟು ಎಂದೂ ಕಳೆಗುಂದದ ನಗು ಅವನದು  ಮಾಸಿದ ಕಪ್ಪಾದ ಇಟ್ಟಲ್ಲೇ ಇಟ್ಟು ಧೂಳು ತಿಂದ ಕಮಟು ವಾಸನೆಯ ಮಳೆಯಲ್ಲಿ ತೋಯಿದ ಬಣ್ಣ ವಾಡಿದ ಬೆವರಲಿ ಬೆಂದಬರಿ ಮೈ ಕುಬೇರ  ಕೌಂಟರಿನಿಂದ  ಖಜಾನೆಗೆ ಬರುವಷ್ಟರಲ್ಲಿ ನಾಲ್ಕಾರು ಬಾರಿ ಎಣಿಸಿಕೊಳ್ಳುವ  ಸ್ಥಿರವಾಗಿ ನಿಲ್ಲದ ಪಾದರಸ  ಗಾಂಧಿ ನೋಟುಗಳೆಂದರೆ ಬರಿ ಸಂಖ್ಯೆಗಳಲ್ಲ ನೋಟಿನ ನೋಟದಲ್ಲೂ ಗಾಂಧಿಯ ಸತ್ಯಾನ್ವೇಷಣೆ. ಗಾಯತ್ರಿ ರವಿ. ಹುಬ್ಬಳ್ಳಿ

ಗಾಯತ್ರಿ ರವಿ. ಹುಬ್ಬಳ್ಳಿ ಅವರ ಕವಿತೆ “ಗಾಂಧಿ ನೋಟು” Read Post »

ಕಾವ್ಯಯಾನ

ನಾಮದೇವ ಕಾಗದಗಾರ “ಗಡಿರೇಖೆಯ ನೆತ್ತರಿನ ಹಬ್ಬ.”

ಕಾವ್ಯ ಸಂಗಾತಿ ನಾಮದೇವ ಕಾಗದಗಾರ “ಗಡಿರೇಖೆಯ ನೆತ್ತರಿನ ಹಬ್ಬ.” ಭೂಪಟದ ಗೆರೆಗಳಲಿರಕ್ತದ ಕಲೆಗಳ ಹಸಿವು,ಅಧಿಕಾರದ ಅಮಲಿಗೆಅನಾಥ ಮಗುವಿನ ಅಳುವೇ ನೈವೇದ್ಯ, ಉಕ್ಕಿನ ಹಕ್ಕಿಗಳ ಅಬ್ಬರಕೆಮಣ್ಣಾದವು ಬದುಕು,ಗೆಲುವಿನ ಪಟಾಕಿ ಅಡಿಯಲ್ಲಿಹೂತುಹೋದವು ಸಾವಿರ ಉಸಿರು, ತುತ್ತು ಅನ್ನದ ಪಾತ್ರೆಯಲಿಬೆಂದು ಹೋದವು ಮದ್ದು-ಗುಂಡು,ಮನೆಮಠದ ನೆನಪುಗಳಿಗೆಈಗ ಸ್ಮಶಾನವೇ ಕಡೆಯ ಉಡುಗೊರೆ, ದೇಶಪ್ರೇಮದ ಘೋಷಣೆಯಲಿಕಾಣದಾದವು ಒಲವಿನ ಕಣ್ಣು,ಯುದ್ಧದ ಬೂದಿಯಲಿ ಉಳಿದದ್ದುಬರಿಯ ಬೂದುಬಣ್ಣದ ಮಣ್ಣು, ಗಡಿ ದಾಟದ ಕನಸುಗಳಿಗೆಬಾಂಬುಗಳೇ ಅಂತಿಮ ವಿರಾಮ,ಗೆದ್ದವನ ಅಟ್ಟಹಾಸದಲಿಸತ್ತವನ ಹೆಸರಿಗಿಲ್ಲ ಆರಾಮ, ಬಂಕರಿನ ಕತ್ತಲಲಿ ಬಿಕ್ಕಳಿಸುತಿದೆ ಬಾಲ್ಯ,ಸಮಾಧಿಯ ಮೇಲೆ ನಿಂತು ನಗುತ್ತಿದೆ ಸಾಮ್ರಾಜ್ಯ;ಗೆದ್ದವನ ಇತಿಹಾಸದಲಿ ರಕ್ತದ ವಾಸನೆ,ಸತ್ತವನ ಮನೆಯಲಿ ಬರಿ ಗೋಡೆಯ ಮೌನ ರೋಧನೆ…. ನಾಮದೇವ ಕಾಗದಗಾರ

ನಾಮದೇವ ಕಾಗದಗಾರ “ಗಡಿರೇಖೆಯ ನೆತ್ತರಿನ ಹಬ್ಬ.” Read Post »

ಕಾವ್ಯಯಾನ, ಗಝಲ್

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್

ಕಾವ್ಯ ಸಂಗಾತಿ ಪ್ರಭಾವತಿ ಎಸ್ ದೇಸಾಯಿ ಗಜಲ್ ಮುಂಗಾರಿನ ಕರಿ ಮುಗಿಲು ಜಲಧಾರೆಯ ಸುರಿಸುತಿದೆ ನೋಡಾಇಳೆಯ ಮೊಗದಿ ನಗೆ ಮೊಗ್ಗು ಬಿರಿದು ಕಂಪು ಹರಡುತಿದೆ ನೋಡಾ ನೀಲಿ ಆಕಾಶದಿ ನೇಸರ ಮೂಡಿಸಿದ ಹೊಂಬಣ್ಣದ ಹೊನಲುಪ್ರಕೃತಿ ಮಡಿಲಲಿ ಮುಂಜಾವು ಪಕ್ಷಿಗಳ ಗಾನ ಕೇಳುತಿದೆ ನೋಡಾ ಒಲವಿನ ಚೈತ್ರ ಬರುವಿಗೆ ಬನವು ಹಸಿರುಟ್ಟು ಹೂ ಅರಳಿಸಿದೆನಿಸರ್ಗದ ಸೊಬಗು ಪ್ರೇಮಿಯ ಎದೆಯವೀಣೆ  ಮಿಡಿಯುತಿದೆ ನೋಡಾ ಧಾರಿಣಿಯ ಹೃದಯ ಸೂರ್ಯ ಕೋಪಕೆ ನಲುಗಿ ನರಳುತಿದೆ  ಮೌನದಿಬಿದ್ದ ಮಳೆಯ ರಭಸಕೆ ನದಿಯು ಕಡಲಾಗಿ ಮೊರೆಯುತಿದೆ ನೋಡಾ ಬೀಸುವ ಸುಳಿಗಾಳಿ ಪಾರಿಜಾತದ  ಪರಿಮಳ ತರುತಿದೆ ಸಂಜೆಇರುಳು ತಿರುಗುವ ತಿರೆಯಲಿ ಚಂದ್ರ ಪ್ರಭೆಯು ಕಾಣುತಿದೆ‌ ನೋಡಾ ( ಸಂಜು ಕೋಳೂರ ಹಳಿಯಾಳ ರಾಗಸಂಯೋಜನೆ ಮಾಡಿದ್ದಾರೆ ) ಪ್ರಭಾವತಿ ಎಸ್ ದೇಸಾಯಿ

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್ Read Post »

ಕಾವ್ಯಯಾನ

ಡಾ. ದಾನಮ್ಮ ಝಳಕಿ ಅವರ ಕವಿತೆ “ಹಸಿರು ತೇರು”

ಕಾವ್ಯ ಸಂಗಾತಿ ಡಾ. ದಾನಮ್ಮ ಝಳಕಿ “ಹಸಿರು ತೇರು” ಹಸಿರು ತೇರು ಹೊರಟಿದೆ,ಭುವಿಯೆಲ್ಲ ಹಬ್ಬವಾಗಿದೆ;ಮರದ ನೆರಳು ಹರಡಿದೆ,ಮನದೊಳಗೆ ಮುದತಂದಿದೆ. ಗಿಡವ ನೆಟ್ಟು ಬೆಳಸೋಣ,ಗಿರಿಯ ಸೊಬಗು ಉಳಿಸೋಣ;ನದಿಯ ನಗುವು ಕೇಳೋಣ,ನಾಳೆಯ ಬದುಕು ಕಾಪಾಡೋಣ. ಎಲೆಯ ನಾದವು ವೀಣೆಯದು,ಹೂವಿನ ಪರಿಮಳ ಗೀತೆಯದು;ಹಕ್ಕಿಯ ಕಲರವ ವೇದವದು,ಪ್ರಕೃತಿಯ ಮಡಿಲೇ ಸ್ವರ್ಗವದು. ಮಳೆ ಸುರಿಯಲು ಕಾಡಿರಬೇಕು,ಕಾಡು ಬೆಳೆಯಲು ನಾವಿರಬೇಕು;ಉಸಿರು ಉಳಿಯಲು ಮರವಿರಬೇಕು,ಜಗವು ಉಳಿಯಲು ಹಸಿರಿರಬೇಕು. ಬನ್ನಿ ಎಲ್ಲರು ಕೈಜೋಡಿಸಿ,ಭೂಮಿತಾಯಿಯ ಪ್ರೀತಿಗೋಸ್ಕರ;ಹಸಿರು ತೇರನು ಎಳೆಯೋಣ,ಭವ್ಯ ಭವಿಷ್ಯವ ಕಟ್ಟೋಣ. ಹಸಿರು ನಮ್ಮ ಉಸಿರಾಗಲಿ,ಹಸಿರು ನಮ್ಮ ಹೆಸರಾಗಲಿ;ಹಸಿರು ತೇರು ಸಾಗುತಿರಲಿ,ಭುವಿಯೆಲ್ಲ ನಗುತಿರಲಿ. ಡಾ. ದಾನಮ್ಮ ಝಳಕಿ

ಡಾ. ದಾನಮ್ಮ ಝಳಕಿ ಅವರ ಕವಿತೆ “ಹಸಿರು ತೇರು” Read Post »

ಕಾವ್ಯಯಾನ

ಆದಪ್ಪ ಹೆಂಬಾ ಅವರ ಕವಿತೆ “ಜಗದೊಡೆಯಮುನಿದರೇ….”

ಕಾವ್ಯ ಸಂಗಾತಿ ಆದಪ್ಪ ಹೆಂಬಾ “ಜಗದೊಡೆಯಮುನಿದರೇ….” ಇನಿತು ಮುನಿಯದೆಎನಿತು ದಣಿಯದೆನಗುತಲಿಹನು ನೇಸರಹೊನ್ನ ಬೆಳಕುಅರುಣ ಕಿರಣಚೆಲ್ಲುತಿಹನು ದಿನಕರ|| ಮತಿಹೀನ ಮನುಜಭೂಮಾತೆಯ ತನುಜಅಮ್ಮನೆಂಬುದ ನೋಡದೇಹೊನ್ನ ಮಣ್ಣನು ಅಗೆಯುತಲಿರುವೆಹಸಿರು ವನಸಿರಿಯ ಬಗೆಯುತಲಿರುವೆಬೆತ್ತಲಾಗುತಿಹಳು ಅಮ್ಮ ನಿನಗಿನ್ನು ಕಾಣದೆ|| ಜಗವ ಬೆಳಗುವಅವನ ಕಣ್ಣಿಗೇ ಮಣ್ಣಂತೆಕಾಣಲೊಲ್ಲದು ತಿಳಿಯಲೊಲ್ಲದುನಿಮ್ಮಗಳ ಕಪ್ಪು ರಂಗಿನಾಟಕೊಂಚ ತಾಳಿಪಾಪದ ಫಲ ಉಣ್ಣುವಿರಂತೆ|| ನೇಸರನೊಬ್ಬಮಹಾ ಮರೆಗುಳಿನಿತ್ಯ ಬರುವನುಎಲ್ಲವ ಮರೆತುಮತ್ತೆ ಮುಳುಗುವನುಬೇಸರದಿ ಮುನಿದು|| ಜಗದೊಡೆಯ ಮುನಿದರೆಉಳಿಗಾಲ ನಮಗಿಲ್ಲಯೋಚಿಸಿ ಮುಂದಡಿ ಇಡಿಮಿಂಚಿ ಹೋದರೆ ಕಾಲಚಿಂತಿಸಿಯೂ ಫಲವಿಲ್ಲ|| ಇಂದಿದೆಯೋಮುಂದಿದೆಯೋಎಂದಿದೆಯೋಮನುಕುಲದ ಮಾರಿಹೋಮತಿಳಿದೇಳು ಸಿಡಿದೇಳು ಕೂಗೇಳುತಡೆಯೋಣ ಭೂರಮೆಯ ನಾಶವನ್ನ|| ಆದಪ್ಪ ಹೆಂಬಾ

ಆದಪ್ಪ ಹೆಂಬಾ ಅವರ ಕವಿತೆ “ಜಗದೊಡೆಯಮುನಿದರೇ….” Read Post »

ಕಾವ್ಯಯಾನ

ತೇಜಾವತಿ .ಎಚ್ .ಡಿ. ಅವರ ಕವಿತೆ “ಸೀಮೆ ಜಾಲಿ”

ಕಾವ್ಯ ಸಂಗಾತಿ ತೇಜಾವತಿ .ಎಚ್ .ಡಿ. “ಸೀಮೆ ಜಾಲಿ” ಅಂಕುಡೊಂಕಾದ ಕರಿ ನಾಗರಗಳಾಗಿಉದಯರಶ್ಮಿಗೆ ಮೈಯೊಡ್ಡಿರುವರಸ್ತೆಯ ಇಕ್ಕೆಲಗಳಲ್ಲಿದಶದಿಕ್ಕಿಗೂ ಕಬಂಧ ಬಾಹುಗಳನ್ನು ಚಾಚಿರುವಸಾಲು ಸಾಲು ಸೀಮೆಜಾಲಿಯ ಮರಗಳುಮೈತುಂಬಾ ಮುಳ್ಳು, ಕೆಸರು ದುರ್ನಾತ ಅವುಗಳ ನಡುವಲ್ಲೊಂದು ಪುಟ್ಟ ರಾಯಸಕ್ಕರಿ ಮರ ತಲೆಯೆತ್ತಿ ನಿಂತು ಸೂರ್ಯನೆಡೆಗೆ ಮುಖಮಾಡಿ ಕಂಗೊಳಿಸಿಚಿಗುರು ಹೂ ಮಿಡಿ ಕಾಯಿಹಣ್ಣು ತೊಟ್ಟು ಹಸಿರು ಉಟ್ಟು ಸಂಭ್ರಮಿಸಿದೆ ಅದೇ ಕೊಳಕು ಅದೇ ಕೆಸರು ಅದೇ ಗಾಳಿ ಅದೇ ಬಿಸಿಲನ್ನು ಉಂಡುಬರಡು ಭೂಮಿಯಲ್ಲಿ ತಂಪೆರೆದು ಅತ್ಮಾಭಿಮಾನವ ಸೂಸುತ್ತಿದೆಪರಿಸರದ ಹಂಗು ತೊರೆದು ಸುತ್ತಲಿದ್ದರೇನಂತೆ ಸೀಮೆಜಾಲಿ ಮುಳ್ಳು ಕಳ್ಳಿ ತಾನು ಮಧುಫಲವನ್ನೇ ನೀಡುವೆನೆಂದುಭೀಷ್ಮಪ್ರತಿಜ್ಞೆ ಮಾಡಿದೆಮುಳ್ಳಿನ ನಡುವೆ ಸುಳಿವ ಹೂಗಳಿಗೆ ಅಲ್ಲಿಂದಲೇ ಹರಕೆಯ ಕೊಟ್ಟಿದೆ ಜಾಲಿಯ ಮರದಾಗಗುಬ್ಬಿ ಗೂಡು ಕಟ್ಟಲಿಕಟ್ಟಿದ ಗೂಡು ನೂರಾಗಿಹಕ್ಕಿಗಳ ಬಾಳು ಹಸನಾಗಲಿ ಹಸನಾದ ಬದುಕು ಹೊನ್ನಾಗಿ ಸುಡು ಬಿಸಿಲ ಈ ನಾಡು ತಂಪಾಗಲಿ ತೇಜಾವತಿ .ಎಚ್ .ಡಿ. ಕ

ತೇಜಾವತಿ .ಎಚ್ .ಡಿ. ಅವರ ಕವಿತೆ “ಸೀಮೆ ಜಾಲಿ” Read Post »

ಕಾವ್ಯಯಾನ

ಮನ್ಸೂರ್ ಮುಲ್ಕಿ “ನೀಲಿ ನೀಲಿ ಆಕಾಶ”

ಕಾವ್ಯಸಂಗಾತಿ ಮನ್ಸೂರ್ ಮುಲ್ಕಿ “ನೀಲಿ ನೀಲಿ ಆಕಾಶ” ನೀಲಿ ನೀಲಿ ಆಕಾಶ ಚುಕ್ಕಿಗಳಿಲ್ಲದೆ ಹೊಳೆಯುವುದೇಸೂರ್ಯನು ಕೊಡದಿರೆ ಆ ಶಾಖ ಚಂದಿರ ಸುಮ್ಮನೆ ಹೊಳೆಯುವನೇ ಹೂವುಗಳಿರದ ತೋಟಗಳು ಪರಿಮಳ ಬೀರಲು ಸಾಧ್ಯವೇಜೇನುಗಳಿರುವ ಗೂಡಿನಲಿ ಸಿಹಿಗಳು ಸಿಗದೇ ಇರುವುದೇ ಪ್ರೀತಿಯೇ ಇರದ ಹೃದಯದಲಿ ನಗುವನ್ನು ಕಾಣಲು ಸಾಧ್ಯವೇನಂಬಿಕೆ ಇಲ್ಲದ ಬದುಕಿನಲಿ ನೆಮ್ಮದಿ ಹುಡುಕಲು ಸಾಧ್ಯವೇ ವಿಶ್ವಾಸದ ನಡೆಯಲಿ ಬೆರೆತಾಗ ಜೀವನ ಸಾರ್ಥಕ ಆಗದೇಸೃಷ್ಟಿಗಳೆಲ್ಲ ಹೇಳುವುದು ಶಾಶ್ವತವಾದ ಸತ್ಯವೇ ನದಿಯು ಸಾಗರ ಸೇರದೆ ಭೂಮಿಯ ಒಡಲಲ್ಲಿ ನಿಲ್ಲುವುದೇಗಾಳಿಯು ಸನಿಹಕ್ಕೆ ಬರದಿರಲು ಉರಿಯುವ ದೀಪವು ಕೂಡ ಶಾಶ್ವತವೇ ಪ್ರೀತಿ ಇರದ ಮನುಜನಲಿ ಬದುಕಿನ ಅರ್ಥವು ತಿಳಿಯುವುದೇನ್ಯಾಯದ ಬದುಕೇ ಜಗದ ನಿಯಮ ಎಂದು ಮನುಜನು ಅರಿಯುವನೇ ಮನ್ಸೂರ್ ಮುಲ್ಕಿ

ಮನ್ಸೂರ್ ಮುಲ್ಕಿ “ನೀಲಿ ನೀಲಿ ಆಕಾಶ” Read Post »

ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ “ನೆನಪಿನ ಸಾಲು”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ “ನೆನಪಿನ ಸಾಲು” ತಿರುಗಿ ಬಾರದ  ಪುಟಗಳು,ನೆನಪಿನ ಬಂಡಿಯಲಿ ಮರೆ ಕ್ಷಣಗಳು,ಚಿನ್ನದ ರಥದಲ್ಲಿ ಓಡಿದ  ಬಾಲ್ಯ,ಇಂದಿನ ನೆನಪಲಿ ಅರಳಿದ ಕಾವ್ಯ. ಕೆಸರಲಿ ಹೊರಳಾಡಿದ  ದಿನಗಳು,ಹಸಿರಲಿ ಓಡಿದ  ಹೆಜ್ಜೆಗಳು,ಅಮ್ಮನ ಮಡಿಲ ಸವಿ ನಿದ್ದೆಯ ಸುಖ, ಇಂದು ಬರಿ ನೆನಪಿನ ಮುಖ. ಗೆಳೆಯರ ಜೊತೆಗೂಡಿ ನಕ್ಕ  ದಿನಗಳು,ಕಾಗದದ ದೋಣಿ ತೇಲಿದ ದಿನಗಳು,ಚಿಂತೆಯಿಲ್ಲದ ನಿರಾತಂಕದ ನಗೆ,ಮರಳಿ ಬಾರದು  ಸಂಭ್ರಮ ಜಗತ್ತಿನೆಡೆಗೆ. ಕಾಲ ಚಕ್ರ ಉರುಳುತ ಸಾಗಿದೆ,ವರ್ತಮಾನದ ಬದುಕು ಯಾಂತ್ರಿಕ,ಹಳೆಯ ದಿನಗಳ ನೆನೆದ ಮನಕೆ, ಮಧುರ ಮೌನ ಆವರಿಸಿದೆ ತನಗೆ. ಹಿಂತಿರುಗಿ ನೋಡಿದೆ  ನೆನಪಿನ ಸಾಲು,ಕಳೆದು ಹೋದ  ದಿನಗಳು ಜೀವನದ ಹಾಲು.ಬಾಲ್ಯ ಯೌವನ ಮುಪ್ಪು  ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ “ನೆನಪಿನ ಸಾಲು” Read Post »

ಕಾವ್ಯಯಾನ

ಸವಿತಾ ದೇಶಮುಖ ಅವರ ಕವಿತೆ “ಪ್ರೀತಿ ಕಳೆದುಹೋಗಿದೆ…”

ಕಾವ್ಯ ಸಂಗಾತಿ ಸವಿತಾ ದೇಶಮುಖ “ಪ್ರೀತಿ ಕಳೆದುಹೋಗಿದೆ…” ಮನೆ ಮೂಲೆ ಮೂಲೆಯಲಿ ಹುಡಕಿದೆನಿನ್ನ ಪುಟ್ಟ ಹೆಜ್ಜೆಯ ಸದ್ದು ಕೇಳದೆಆತುರದಿ ಓಡಿಬರುವ ನಿನ್ನ ನೋಟದ,ನೆನಪಾಗಿ ಹೃದಯ ತುಂಬಿ ಕಾಡುತ್ತಿದೆ.!!೧!! ತಿಂಡಿ ಬಟ್ಟಲೂ ಹಾಗೆಯೇ ಉಳಿದಿದೆ,ಕಾಯುತ ನಿನ್ನ ದಾರಿ ನೋಡುತ್ತಿದೆ.ಎಲ್ಲಿ ಹೋದೆ ಕಣ್ಮರೆಯಾಗಿ ಹೊರಟೆನಿನ್ನಿಲ್ಲದೆ ಮನವು ಖಾಲಿಯಾಗಿದೆ.!!೨!! ಮಡಿಲ ಮೇಲೆ ಮಲಗಿದ ಕ್ಷಣಗಳು,ಮನದಾಳದಿ ಜೀವಂತವಾದ ದಿನಗಳುಮುದ್ದಿನ ಮ್ಯಾವ್ ಮ್ಯಾವ್ ಕೇಳಿದ ಕ್ಷಣಕಣ್ಣಂಚಿನಲಿ ಕಂಡ ನಿನ್ನ ತುಂಟಾಟಗಳು!!೩!! ಕರೆಗೆ ಕಿವಿಗೊಡದೆ ಗಾಳಿಗೆ ತೂರಿದ ಓಟಬೇಡವೆಂದರು ಮತ್ತೆ ನನ್ನ ಮನೆಗೆ ಬಂದ ಆಟನಿನ್ನ ಪುಟ್ಟ ಪಾದಗಳ ಗುರುತು ಕಂಡರೆ,ನಲಿ ನಲಿದಾಡಿದ ದಿನಗಳ ನೆನಪಿನ ಕಾಟ!!೪!! ದುಃಖದ ಮೋಡಗಳ ದೂರವಾಗದದುಅದೇತ್ತೋ ದೂರ ಮರೆಯಾಗಿ ಹೋದೆನೀ ನೇಟ್ಟಿದ ಪ್ರೀತಿ ಕಳೆದು ಹೋಗದು,ನೆನಪುಗಳ ಬೆಳಕು ಎಂದಿಗೂ ಆರದು. !!೫!! ಹೃದಯ ನಿನ್ನನು ದೂರ ತಿಳ್ಳಿದರೂ ನೀಕಲಿಸಿದ ಪ್ರೀತಿ ಹಿಡಿಸಿದೆ ಮನಸ್ಸಿಗೆ,ಆ ನಿನ್ನ ಮುದ್ದು ಕಣ್ಣುಗಳು, ನಿಷ್ಕಲ್ಮಶಆ ಪುಟ್ಟ ಮುಖ, ನನ್ನ ದಿನದ ನಗು!!೬!! ಆ ಚೂಪಾದ ಕಿವಿಗಳು ಹೆಜ್ಜೆಯ ಸದ್ದಿಗೆಎಚ್ಚರವಾಗಿ ನಿಲುವ ನಿನ್ನ ಮೈಮಾಟದಸೊಬಗು, ಸವಿಯಲು ಹಬ್ಬವಾಗಿತ್ತು ನನಗೆನೀ ಬಂದರೆ ಮನೆ ತುಂಬಾ ಜೀವ ತುಂಬಿತ್ತ !!೭!! ನೀ ಹೋದರೆ ಮೌನವೇ ಉಳಿಯುತ್ತಿತ್ತು.ಮತ್ತೆ ಮತ್ತೆ ಬಂದು ಪ್ರೀತಿ ಹರಿಸಿದ ಬೆಕ್ಕುನೋಡದೆ ಮನದ ಬಾಗಿಲು ಮುಚ್ಚಿದೆ.ಆದರೆ ನೀ ಮಾತ್ರ ಹಠಮಾರಿ ಮಗು, ಮತ್ತೆ ಮತ್ತೆ ಬಂದು ಹೃದಯ ತಟ್ಟಿದ್ದೆ.ಆ ನಿನ್ನ ಮುದ್ದು ಮುದ್ದಾದ ಕಣ್ಣುಗಳು…ಎರಡು ಪುಟ್ಟ ನಕ್ಷತ್ರಗಳು ಹೊಳಪುಒಮ್ಮೆ ನೋಡಿದರೆ ಸಾಕೆನಸದು ….. ಕಲ್ಲಿನ ಮನಕರಗುತ್ತು ಆ ಪುಟ್ಟ ಮುಖ,ಹಾಲಿನ ನೊರೆ ಮೃದು, ಚೂಪಾದ ಕಿವಿಗಳು,ಮಾತು ಕೇಳುತಿರೆ ನೆಟ್ಟಗೇ ನಿಲುವ ಆಟಮೈ ತುಂಬಿದ್ದ ಬಣ್ಣವೋ ದೇವರು ಬಿಡಿಸಿದ ಚಿತ್ರವೊಂದು! ಕಂದು ಮೋಡದ ನಡುವೆಕಪ್ಪು ಮಳೆಯ ಗೆರೆಗಳಂತೆ, ನಿನ್ನ ಮೈಮಾಟಕಣ್ಣಿಗೆ ಹಬ್ಬವಾಗಿತ್ತು.ಪುಟ್ಟ ಹೆಜ್ಜೆಗಳ ಸದ್ದು,ಮೃದುವಾದ ಬಾಲದ ನಾಟ್ಯ ಹೇಳ್ತಿರೋದು, ಸುತ್ತ ಸುತ್ತುವ ನಿನ್ನ ಪ್ರೀತಿ, ಮಾತಿಲ್ಲದಮಮತೆಯ ಭಾಷೆಯಾಗಿತ್ತು.ನಾನು ದೂರಸರಿದರು,ಮತ್ತೇ ಮತ್ತೇ ಬಂದೆ… ಅಂದುಅರಿಯಲಿಲ್ಲ ಅದು ಕೊನೆಯ ಬೆಟ್ಟೆಂದು.. ಈಗ ಮನೆ ತುಂಬಾ ನಿಶ್ಯಬ್ದ, ನಿನು ಪ್ರತಿಮೂಲೆಯಲ್ಲೂ ಜೀವಂತವಾಗಿರುವೆ ಹಾಗೆಮುದ್ದಾದ ಚೇಷ್ಟೆಗಳೆಲ್ಲ ಕಂಗಳ‌ ನೀರುಅದೆಂದು ನಿನ್ನ ಮೋಹದಿ ಸಿಲುಕಿದೆ…. ಎಲ್ಲೋ ಒಂದು ಕಡೆ ನೀ ಇದ್ದರೆ, ಒಮ್ಮೆಮಾತ್ರ ಬಂದು ನೋಡು ಜೀವಾ.ಕಣ್ಣಗಳ ನೋಟಕ್ಕೆ ಕಾಯುತ್ತಿವೆ,ಮನದ ಮನೆಯ ಬಾಗಿಲು ತೆರೆದು ಮತ್ತೇ ಬರುವಿಗಾಗಿ ಕಾಯುತ್ತಿರುವೆ ಸವಿತಾ ದೇಶಮುಖ

ಸವಿತಾ ದೇಶಮುಖ ಅವರ ಕವಿತೆ “ಪ್ರೀತಿ ಕಳೆದುಹೋಗಿದೆ…” Read Post »

ಕಾವ್ಯಯಾನ, ಗಝಲ್

ಡಾ ರೇಣುಕಾತಾಯಿ ಸಂತಬಾ ರೇಮಾಸಂತರವರ ಗಜಲ್

ಕಾವ್ಯ ಸಂಗಾತಿ ಡಾ ರೇಣುಕಾತಾಯಿ ಸಂತಬಾ  ರೇಮಾಸಂತರವರ ಗಜಲ್ ನೀ ಒಪ್ಪದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ನೀ ಸುಮ್ಮನಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಅಂತರಾತ್ಮ ನಿನ್ನ ಪ್ರೀತಿಗೆ ಶರಣಾಗಿ ಬಿಟ್ಟೇತಿ,ನೀ ಕಾಣದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ರಾಧೆಯಾಗಿ ನಿನ್ನ ದನಿ ಪೂಜಿಸುತ್ತೇನಿ ಗೊತ್ತೇನ,ನೀ ನೋಡದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಸದ್ದಿಲ್ಲದ ಮನಸ್ಸಿನ್ಯಾಗ ಮೆತ್ತಗ ಬಂದಬಿಟ್ಟಿ,ನೀ ಒಲಿದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ತಾಯಿಗೆ ಗೊತ್ತಿಲ್ಲದ ನಾ ಹೃದಯದೊಳಗಿಟ್ಟಿನಿ,ನೀ ದೂರವಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಡಾ ರೇಣುಕಾತಾಯಿ ಸಂತಬಾ ರೇಮಾಸಂತ    

ಡಾ ರೇಣುಕಾತಾಯಿ ಸಂತಬಾ ರೇಮಾಸಂತರವರ ಗಜಲ್ Read Post »

You cannot copy content of this page

Scroll to Top