ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ವಾಣಿ ಯಡಹಳ್ಳಿಮಠ ಅವರ ಗಜಲ್

ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ ಗಜಲ್ ಮನದ ಮಗು ಹಠ ಮಾಡುವ ಮುನ್ನ ಬಂದುಬಿಡುನೊಂದು ಬಿಕ್ಕಿ ಅಳುವ ಮುನ್ನ ಬಂದುಬಿಡು ಇರಲಿ ಮೈಲುಗಟ್ಟಲೇ ಅಂತರ  ಇಬ್ಬರ ನಡುವೆ ನೆನಪು ನರಳುತ ಮಾಸುವ ಮುನ್ನ ಬಂದುಬಿಡು  ನನಗೂ ಇದೆ ಹಗಲು ದುಡಿಯುವ ಜವಾಬ್ದಾರಿಇರುಳ ಕನಸು ಸಾಯುವ ಮುನ್ನ ಬಂದುಬಿಡು ಜೊತೆ ಬಾಳುವ ಅವಕಾಶವೇ ಇಲ್ಲ ನಮಗೆಪ್ರೀತಿಯ ಎದೆಬಡಿತ ನಿಲ್ಲುವ ಮುನ್ನ ಬಂದುಬಿಡು ವಾಣಿಯ ಈ ಜನ್ಮವೆನೋ ಕಳೆಯುವುದು ವಿರಹದಿಮರುಜನ್ಮದಿ ಮತ್ಯಾರೋ ಕೈ ಹಿಡಿವ ಮುನ್ನ ಬಂದುಬಿಡು ವಾಣಿ ಯಡಹಳ್ಳಿಮಠ

ವಾಣಿ ಯಡಹಳ್ಳಿಮಠ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಡಾ.ರೇಖಾ ಉದಯ್‌ ಅವರ ಗಜಲ್

ಕಾವ್ಯ ಸಂಗಾತಿ ಡಾ.ರೇಖಾ ಉದಯ್‌ ಗಜಲ್ ನಿನ್ನೊಳಗಿನ ಸೆಳೆತಕ್ಕೆ ಸೋತಿದ್ದೇನೆ ಕವಿತೆನನ್ನೊಳಗಿನ ಭಾವನೆಗಳ ಹೇಳಿದ್ದೇನೆ ಕವಿತೆ ಸೋತು ಗೆದ್ದು ನನ್ನೊಳಗೆ ನೀನಾಗಿದ್ದೀಯಲ್ಲೇನಿನ್ನಿಂದ ನವೀರಾದ ಭಾವ ತಾಳಿದ್ದೇನೆ ಕವಿತೆ ದುಗುಡ  ದುಮ್ಮಾನಗಳ ಸರಸಿ ಆವರಿಸಿದ್ದಿಯಲ್ಲೇನೀನಿಲ್ಲದ ನಾನು ಶೂನ್ಯಳೆಂದು ಕೇಳಿದ್ದೇನೆ ಕವಿತೆ ಮುದುಡಿದ ಮನಸ್ಸಿಗೆ ಹೊಸ ಸಂಚಲನ ಮೂಡಿಸಿದೆನನ್ನಲ್ಲಿ ತಿಳಿಯದೆ ನೀ ಅವಿತದ್ದು ನೋಡಿದ್ದೇನೆ ಕವಿತೆ ಒಣಗಿದ ಮರದಲ್ಲಿ ಹೊಸ ಚಿಗುರ ಕಂಡಂತಾಗಿದೆರೇಖೂಳ ಮೇಲಿರುವ ಆ ಒಲವಿಗೆ ನಕ್ಕಿದ್ದೇನೆ ಕವಿತೆ ಡಾ.ರೇಖಾ ಉದಯ್

ಡಾ.ರೇಖಾ ಉದಯ್‌ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಎಮ್ಮಾರ್ಕೆ ಅವರ ಗಜಲ್

ಕಾವ್ಯ ಸಂಗಾತಿ ಎಮ್ಮಾರ್ಕೆ ಗಜಲ್ ಎದೆಗಡಲನು ಮಥಿಸಿ ಪಡೆದಿಹ ಅಮೃತವದು ಪ್ರೀತಿಭಾವದಲೆಯು ದಡವ ಸೇರಿದ ಸಂಗಮವದು ಪ್ರೀತಿ ತೋರಿಕೆಗೆ ತಳೆದ ಹೂ ಹೇರಿಕೆಗೆ ಹಬ್ಬಿದ ಬಳ್ಳಿಯಲ್ಲನೆಲ ಮುಗಿಲುಗಳ ನೆಚ್ಚಿ ಬಿರಿದ ಕುಸುಮವದು ಪ್ರೀತಿ ಅಹಮಿಕೆಯ ಅರಿವಿಲ್ಲ ಸಂಶಯಗಳ ಸುಳಿವೆನಿತಿಲ್ಲಗುಡಿಸಲನೇ ಗುಡಿಯ ಮಾಡಿದ ಪವಾಡವದು ಪ್ರೀತಿ ಹೆಚ್ಚು ಕಡಿಮೆ ಎಂಬ ಗಡಿಗಳಿಲ್ಲ ಗಡಿಬಿಡಿಯೂ ಇಲ್ಲಆಡಂಬರಕಾತುಕೊಳ್ಳದ ಸುಗ್ಗಿ ಸಂಭ್ರಮವದು ಪ್ರೀತಿ ಈ ಒಲವ ಜನನಕೆ ಮಹೂರ್ತ ಘಳಿಗೆಗಳು ಬೇಕಿಲ್ಲಬೆಸೆದ ಮನಗಳಂಗಳದ ನಿತ್ಯದ ಉತ್ಸವವದು ಪ್ರೀತಿ ಎಮ್ಮಾರ್ಕೆ

ಎಮ್ಮಾರ್ಕೆ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಇಂದಿರಾ ಕೆ ಅವರ ಗಜಲ್

ಕಾವ್ಯ ಸಂಗಾತಿ ಇಂದಿರಾ ಕೆ ಗಜಲ್ ದೇಶ – ದೇಶ ನಡುವೆ ದ್ವೇಷ ಜ್ವಾಲೆ ಆರಿಸುವವರು ಯಾರಿಲ್ಲಿಮುಗಿಲು ಮುಟ್ಟಿದ ಅಳಲು ಆಕ್ರಂದನ ಆಲಿಸುವವರು ಯಾರಿಲ್ಲಿ ಯುದ್ಧ ರಣಾರ್ಭಟಕೆ ಬೆಚ್ಚಿ ಬಿದ್ದಿದೆ ಮನುಕುಲವುಜಗದಗಲ ಹರಡಿದ ಅಶಾಂತಿಯ ಅಳಿಸುವವರು ಯಾರಿಲ್ಲಿ ಬಲಿಷ್ಠತೆ ಮೆರೆದು ದೀನರಿಲ್ಲಿ ಬಲಿಪಶುಗಳಾದರುರಕ್ತ- ಸಿಕ್ತದಲಿ ಸಿಕ್ಕ ಹೆಣಗಳ ಎಣಿಸುವವರು ಯಾರಿಲ್ಲಿ ಅಸೂಯೆ ಅಹಂನ ಪ್ರದರ್ಶನ ಕರಾಮತ್ತೋಅಮಾಯಕರ ಜೀವ ಬೆಲೆ ತಿಳಿಸುವವರು ಯಾರಿಲ್ಲಿ ಕ್ರಾಂತಿ ಕಹಳೆ ಹೊತ್ತಿಸಿ ಕ್ಷಿಪಣಿಗಳ ಮಳೆಗೈಯುತಿವೆಹಲ್ಲೋಲ- ಕಲ್ಲೋಲ ಜಗತ್ತು ದಂಡಿಸುವವರು ಯಾರಿಲ್ಲಿ ಭಯದ ಭೀತಿ ಆವರಿಸಿದೆ ಅಳಿದುಳಿದ ಮನಗಳಲಿ  ವಿರಾಮವಿಲ್ಲದೆ ವಿರಾಜಿಸುತಿದೆ ವಿನಾಶ ಕದನ ತ್ಯಜಿಸುವವರು ಯಾರಿಲ್ಲಿ ವಿಶ್ವದಾದ್ಯಂತ ಶಾಂತಿ ಸ್ನೇಹ – ಭಾತೃತ್ವ ನೆಲೆಸಲೆಂದು ಪ್ರಾರ್ಥಿಸಿಬೇಕಿದೆ ಇಂದಿರೆದಾಳಿ – ಪ್ರತಿದಾಳಿಗೆ ನಲುಗಿದವರ ರಕ್ಷಿಸುವವರು ಯಾರಿಲ್ಲಿ ಇಂದಿರಾ ಕೆ

ಇಂದಿರಾ ಕೆ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಕಲ್ಪನಾ ಎಸ್‌ ಪಾಟೀಲ್‌ ಅವರ ಗಜಲ್

ಕಾವ್ಯ ಸಂಗಾತಿ ಕಲ್ಪನಾ ಎಸ್‌ ಪಾಟೀಲ್‌ ಗಜಲ್ ತೆರೆದ ಎದೆಯ ಕದವ ಬಡೆಯುತಲೆ ಇದ್ದೆಅದಾವ ಊರ ಕನಸಿನೊಡೆಯನೊನೀನಾಗಿದ್ದೆ ಕನಸಲೆ ಕನಸುಗಳು ಬಹುದೂರದಿ ಸಾಗುತಲೆ ಇದ್ದವುನೀನು ಹೋದ ದೂರದೂರಿನ ದಾರಿಯಬೆನ್ನಟ್ಟಿಯೆ ಇದ್ದವು ನೀ ದಾರಿ ತಪ್ಪಿಸಿದರೂ ನೀನು ಕ್ರಮಿಸುವದಾರಿಯ ಮರೆಯದಂತೆ ಮಾಡಿದ್ದವು ಕನಸೆ ಗುರಿಯಾಗಿಸಿಕೊಂಡು ನಡೆದಿದ್ದೆ ನೀನುಆ ಕನಸೆ ಗುರಿಯ ತೀರ ತಲುಪಿಸಿದನು ಮರೆತೆ ಏನು ನನ್ನ ಕನಸೆ ನೀನು ನಿನ್ನ ಕನಸಿಗಾಗಿ ನಾನೆ ಎಂದೆನೀ ಬರಿ ಕನಸ ಕಂಡರೆ ಕಾವ್ಯಧರೆಗೆ ಕನಸೆ ನೀನಾಗಿದ್ದೆ ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್‌ ಪಾಟೀಲ್‌ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ವಾಣಿ ಯಡಹಳ್ಳಿಮಠ‌ ಅವರ ಗಜಲ್

ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ‌ ಗಜಲ್ ಚಂದ್ರ,ತಾರೆಗಳು ನಾ ಕೈ ಚಾಚಿದರೇ ಸಿಕ್ಕಿ ಬಿಡುವಷ್ಟು ಹತ್ತಿರದಲ್ಲಿರಬೇಕಿತ್ತುನಿದಿರೆಯು ರೆಪ್ಪೆ ಮುಚ್ಚುವ ಮುನ್ನ ಕಣ್ಣ ಸೇರುವಷ್ಟು ಹತ್ತಿರದಲ್ಲಿರಬೇಕಿತ್ತು ಪೂರ್ವದಿಂದ ಪಶ್ಚಿಮದೆಡೆಗೆ,ಬೆಳಕಿನೊಂದಿಗೆ  ದಿನವೂ ರವಿಯ ಪಯಣಗೂಡುಗಳು,ರೆಕ್ಕೆ ದಣಿಯುವುದರೊಳಗೆ ಸಿಗುವಷ್ಟು ಹತ್ತಿರದಲ್ಲಿರಬೇಕಿತ್ತು ಬಾನಂಗಳದಿ ಚೆಲ್ಲಿದ ಬೆಳದಿಂಗಳದು ನಗುವಿನ ನೆಮ್ಮದಿಯ ಮಡಿಲಿನಂತಿದೆಹುಣ್ಣಿಮೆಯು,ಹಗಲಾಗುವುದರೊಳಗೆ ನಾ ಮುಟ್ಟುವಷ್ಟು ಹತ್ತಿರದಲ್ಲಿರಬೇಕಿತ್ತು ಜಗದ ಸಂತೆಯಲಿ ಅತೀ ಬೇಡಿಕೆಯ,ಮಾರಾಟಕ್ಕಿಡದ ಮೋಹವೊಂದೂ ಇದೆಪ್ರೀತಿಯು,ನಾ ನಗುತ ಕಣ್ಣೆತ್ತಿ ನೋಡಿದರೇ ಕಾಣುವಷ್ಟು ಹತ್ತಿರದಲ್ಲಿರಬೇಕಿತ್ತು ವಾಣಿಯ ಜೀವ,ಜೀವನದ ಜಂಜಾಟಗಳೆದುರು ನಿಡುಸುಯ್ಯುತ ಬಿಕ್ಕುತಿದೆಶಿವನ ಸಂತೈಕೆ,ನಾ ಸೋಲುವುದರೊಳಗೆ ಸೋಕುವಷ್ಟು ಹತ್ತಿರದಲ್ಲಿರಬೇಕಿತ್ತ ವಾಣಿ ಯಡಹಳ್ಳಿಮಠ

ವಾಣಿ ಯಡಹಳ್ಳಿಮಠ‌ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್

ಕಾವ್ಯ ಸಂಗಾತಿ ಪ್ರಭಾವತಿ ಎಸ್ ದೇಸಾಯಿ ಗಜಲ್ ಜಗವು ಉರಿಯುತಿದೆ ಜೀವಿಗಳು ನರಳುತಿವೆ ನೀ ಸುಮ್ಮನಿರುವಿಹೃದಯಗಳು ಬೆಂಕಿಯಲಿ ಬಿದ್ದು ಬೇಯುತಿವೆ ನೀ ಸುಮ್ಮನಿರುವಿ ಕಂದಮ್ಮಗಳು ಹುಡುಕುತಿವೆ  ಹೆತ್ತವರನು ನೆತ್ತರಿನಲಿ ನೋಡುದೀನರು ಕಂಡ ಕನಸುಗಳು ಮಣ್ಣಾಗುತಿವೆ  ನೀ ಸುಮ್ಮನಿರುವಿ ವಿಶ್ವದಲ್ಲಿ ನಾನೆಂಬ ಅಹಂಕಾರದ ಕಹಿ ಕಳೆಯು ಬೆಳೆಯುತಿದೆನಂಬಿದ  ದೈವಗಳೆಲ್ಲಾ ಸಾಯುತಿವೆ ನೀ ಸುಮ್ಮನಿರುವಿ ನಿತ್ಯ ಉರುಳುತಿವೆ ರಾಶಿ ಹೆಣಗಳು ಅಂತ್ಯಕ್ರಿಯೆ ಇಲ್ಲದೆಯೇಭೂಮಂಡಳದಲಿ ಮಸಣಗಳು ಬೆಳೆಯುತಿವೆ ನೀ ಸುಮ್ಮನಿರುವಿ ಪ್ರೀತಿಯಲಿ ಎಲ್ಲರನು ಬಂಧಿಸುವ ಶಕ್ತಿಯು ನಿನಗಿದೆ ಪ್ರಭೆದ್ವೇಷ ಅಸೂಯೆಯ ಬಾಂಬುಗಳು  ಸಿಡಿಯುತಿವೆ  ನೀ ಸುಮ್ಮನಿರುವಿ ಪ್ರಭಾವತಿ ಎಸ್ ದೇಸಾಯಿ

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಡಾ.ರೇಖಾ ಉದಯ ಅವರ ಗಜಲ್

ಕಾವ್ಯ ಸಂಗಾತಿ ಡಾ.ರೇಖಾ ಉದಯ ಗಜಲ್ ಅದಾವ ಮೋಹದ ಮಾಯೆ ಸೆಳೆದಿದೆ ನಿನ್ನೆಡೆಕಣ್ಣೊಳಗಿನ ಒಲವಿನ ನೋಟ ಕರೆದಿದೆ ನಿನ್ನೆಡೆ ಗಾಳದಲ್ಲಿ ಸಿಕ್ಕ ಮೀನಂತಾಗಿದೆ ನನ್ನೀ ಜೀವನನಂಬಿಕೆಯೇ ಒಲವೆಂಬ ಜಾಡು ಹಿಡಿದಿದೆ ನಿನ್ನೆಡೆ ನಯವಾದ ಮಾತುಗಳೇ ಮುದ ನೀಡಿದವು ಎನಗೆಶರದಿ ಸೇರುವ ತವಕದಿ ಮನ ನಡೆದಿದೆ ನಿನ್ನೆಡೆ ತಿಳಿಯದಂತಿರಬೇಕು ಮಾಡಿದ ತಪ್ಪುಗಳಿಗೆ ಅಲ್ಲವೇಭ್ರಮೆಯ  ತೊರೆದು ನಂಬಿಕೆಯ ಪಡೆದಿದೆ ನಿನ್ನೆಡೆ ರೇಖೂ ಸೋಕಿಸಿಕೊಳ್ಳದಿರು ಕರಿ ನೆರಳ ಛಾಯೆಯಸೋಲಿನ ಭೀತಿಯ ಬಿಟ್ಟು ಭರವಸೆ ಬೆಳೆದಿದೆ ನಿನ್ನೆಡೆ ಡಾ.ರೇಖಾ ಉದಯ

ಡಾ.ರೇಖಾ ಉದಯ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಕಲ್ಪನಾ ಎಸ್ ಪಾಟೀಲ ಅವರ ಗಜಲ್

ಕಾವ್ಯ ಸಂಗಾತಿ ಕಲ್ಪನಾ ಎಸ್ ಪಾಟೀಲ ಗಜಲ್ ಜಗಕೆಲ್ಲ ತಿಳಿಸಿ ಹೇಳಲೆಬೇಕಿಲ್ಲ ಸಖಈ ಬದುಕು ನಮಗಾಗಿಯೇ ನಲ್ಲ ಜಗದಗೊಡವೆ ಏತಕೆ ಹೇಳು ನಲ್ಲಆಗದಿರಲಿ ನಿನ್ನಮನ ಗೊಂದಲದ ಗೂಡು ಕೊರಳ ಬಳಸಿ ಕಿವಿಯಲುಸಿರಿಲು ನೀನಾ ಎದೆಗೆ ಒರಗಿ ನಾಚಿದ ಆ ದಿನಗಳು ಆಣೆಯನೊಂದು ನೀ ಮಾಡಿದೆ ನಲ್ಲಹಕ್ಕಿಗೂಡು ಸಾಕ್ಷಿಯಾಗಿದೆ ಸಾಕಲ್ಲ ಕಾವ್ಯಧರೆ ಪ್ರಮಾಣಗಳನೆಂದು ನಂಬಿಲ್ಲನಿನ್ನನೇ ನಂಬಿಹಳು ನಿನಗೇಕೆ ತಿಳಿದಿಲ್ಲ ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್ ಪಾಟೀಲ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಜ್ಯೋತಿ ಮಾಳಿ ಅವರ ಹೊಸ ಗಜಲ್‌

ಕಾವ್ಯ ಸಂಗಾತಿ ಜ್ಯೋತಿ ಮಾಳಿ ಗಜಲ್‌ ಹೆಣ್ಣಾಗಿ ಹುಟ್ಟಿಸು ಅಂತ ನಿನ್ನಲ್ಲೇನು ನಾನು ಮನ್ನತ್ ಮಾಡಿರಲಿಲ್ಲಎಲ್ಲರಂತೆ ಬದುಕಬಲ್ಲೆ, ಸುಖದಿಂದ ಬಾಳಲು ಜನ್ನತ್ ಬೇಡಿರಲಿಲ್ಲ ನಾನೇನು ಗುನಾ ಮಾಡಿದಿನೋ ಈ ದುರಾದೃಷ್ಟ ಸ್ಥಾನ ನೀಡಿರುವೆಪ್ರಾಣಿಯಾಗಿ ಹುಟ್ಟಿಸಬಹುದಿತ್ತು ಮನುಜನ ಶೌರತ್ ಅರಸಿರಲಿಲ್ಲ ಹೆಣ್ಣಿನ ಘನತೆ ಗೌರವ ಕಾಪಾಡುವ ಸುಂದರ ಸಮಾಜವಿರಬೇಕುಸಮಬಾಳು ನೀಡೆಂದೆನೇ ಹೊರತು ಸುಖದ ಸೌಲತ್ ಬಯಸಿರಲಿಲ್ಲ ಹೆಂಗರುಳಿನಲಿ ಪೋಣಿಸಿ ನಯ ನೆರಳಿನ ಸೂರಿನಡಿ ಇಡು ನನ್ನಮಾ ಬೆಹೆನ್ ಬಹು ಬೇಟಿಯಾಗಿ ನೋವಿರದ ನೌಲತ್ ನಡೆಸಿರಲಿಲ್ಲ ನೀ ಸೃಷ್ಟಿಸಿದ ಕರಾಮತ್ ನಲಿ ಜ್ಯೋತಿಗೆ ಔರತ್ ಸ್ಥಾನ ಸಿಕ್ಕಿದೆಸಾರ್ಥಕ ಸಾವೊಂದು ಸಾಕು ಇದಕ್ಕಿಂತ ದೊಡ್ಡ ದೌಲತ್ ಕೇಳಿರಲಿಲ್ಲ ಮನ್ನತ್ = ಹರಕೆಜನ್ನತ್ = ಸ್ವರ್ಗಶೌರತ್ = ಕೀರ್ತಿಸೌಲತ್ = ಸೌಲಭ್ಯನೌಲತ್ =ಶ್ರೇಷ್ಠ ಬದುಕುಔರತ್ = ಸ್ತ್ರೀದೌಲತ್ = ಶ್ರೀಮಂತಿಕೆಮಾ = ತಾಯಿಬಹೆನ್ = ಸಹೋದರಿಬೇಟಿ = ಮಗಳುಬಹು = ಸೊಸೆಕರಾಮತ್ = ಕೈಚಳಕಗಲತಿ = ತಪ್ಪುಗುನಾ= ಪಾಪ ಜ್ಯೋತಿ ಮಾಳಿ ಬೆಳಗಾವಿ

ಜ್ಯೋತಿ ಮಾಳಿ ಅವರ ಹೊಸ ಗಜಲ್‌ Read Post »

You cannot copy content of this page

Scroll to Top