ಗಜಲ್
ಗಜಲ್ ಡಾ.ರೇಣುಕ ಅರುಣಕುಮಾರ ಕಠಾರಿ ಹಣೆ ಬರಹವೆಂದು ಕೈ ಕಟ್ಟಿ ಮಾತಿದ್ದೂ ಸುಮ್ಮನೆ ಕೂಡಬೇಕೆ ಈ ಲೋಕದೆದುರುಒಳಮನೆಯ ಹೊಸ್ತಿಲಳೊಗೆ ಮೈಲಿಗೆಂದು ಕುದಿಯಬೇಕೆ ಈ ಲೋಕದೆದುರು ಮಡಿ ಮೈಲಿಗೆಯ ಮನದೆದುರು ಬೆತ್ತಲೆ ಒಂದಾಗಿದೆ ಬದುಕುಮನಸಿಗೆ ಮೈಲಿಗೆ ಇಲ್ಲವೆಂದು ತಿಳಿದರು ದೂರವಾಗಬೇಕೆ ಈ ಲೋಕದೆದುರು ಮೂರರೊಳಗೆ ಬಂಧನ ಮೂರರೊಳಗೆ ಬೆಂದೇನಾ ಧರ್ಮದೆದುರುಹೆಣ್ಣನೇ ದೇವರು ಮಾಡಿದ ಬದುಕಿನೊಳಗೆ ಮಾತನು ಅಡವಿಡಬೇಕೆ ಈ ಲೋಕದೆದುರು ಬೆಂಕಿಗೆ ಹಾರಿದವಳೊಬ್ಬಳು ಬೆನ್ನು ಹತ್ತಿದವಳೊಬ್ಬಳು ಕಲ್ಲಾಗಿ ಕಾದವಳೊಬ್ಬಳು ಚರಿತ್ರೆಯೇ ಹೀಗೆಗಾದೆಯೊಳಗೆ ನೇಣು ಬಿಗಿದರೂ ನಮ್ಮ ಕುಲವನು ಕುರುಡಾಗಬೇಕೆ ಈ ಲೋಕದೆದುರು ‘ರೇಣು’ ಕೇಳೆ ಮುಡಿಗಳೆಲ್ಲ ಒಂದಾಗಬೇಕು ನಡೆ ನುಡಿಯೊಳಗೆ ಇಂದೇಕತ್ತಲಾದ ಬೊಗಸೆಯೊಳಗೆ ಮೈಲಿಗೆ ತೊಳೆದು ಬೆಳಕ ಬುಗ್ಗೆ ಚಿಮ್ಮಿಸಬೇಕು ಈ ಲೋಕದೆದುರು. ************************************************************









