ಬರದ ಛಾಯೆಗೆ ಬುವಿ ಮೇಲೆ ಬಿರುಕಿನ ಚಿತ್ರ ಜೀವತಳೆದಿದೆ
ವರುಣ ದೇವನ ಕೃಪೆಯಿಂದ ಅವತರಿಸಬೇಕಿದೆ ಹನಿ ಮುತ್ತು
ಗಜಲ್
ಅಕ್ಕಮಹಾದೇವಿ ಜನುಮದಿನದ ವಿಶೇಷ ಗಜಲ್ ಪ್ರಭಾವತಿ ಎಸ್ ದೇಸಾಯಿ ಮಾಯಾ ಮೋಹದ ಬಟ್ಟೆಯನು ಕಳಚಿ ಎಸೆದವಳುವೈರಾಗ್ಯದ ಬಟ್ಟೆಯನು ಅರಸುತ್ತಾ ಹೊರಟವಳು ಅರಮನೆಯ ವೈಭವದ ಸುಖ ದಿಕ್ಕರಿಸಿದವಳುಭವದ ಸುಳಿಗೆ ಸಿಲುಕದೆ ಬಯಲಲಿ ಒಂದಾದವಳು ಹಸಿವು ತೃಷೆ ಭಾದೆಗಳನು ಕಪೂ೯ರದಂತೆ ದಹಿಸಿದವಳುಅಂಗ ಚೇಷ್ಟೆ ಕಾಮ ಕ್ರೋಧ ಗಳ ಕವಚ ಕಳಿಚಿದವಳು ಜಗ ನಿಮಿ೯ಸಿದ ಮೌಢ್ಯ ಬೇಲಿಯನು ದಾಟಿದವಳುಸ್ತ್ರೀ ಸಂಕುಲನಕೆ ಆತ್ಮಸ್ಥೈರ್ಯ ತುಂಬಿದವಳು ಶರಣ ಸಮೋಹದಲಿ ಅಗ್ರ ರತ್ನವಾಗಿ ಬೆಳಗಿದವಳುನಿರಾಕಾರನ ಪಡೆಯಲು ಸರ್ವವನು ತ್ಯಜಿಸಿದವಳು ಅಲ್ಲಮನ ಪ್ರಶ್ನೆಗೆ ಉತ್ತರಿಸಿ ಲೋಕ ಗೆದ್ದವಳುಸಾವಿಲ್ಲದ ಕೇಡಿಲ್ಲದ ಚೆಲುವನನು ಮೆಚ್ಚಿದವಳು ಬೆಟ್ಟ ಹಳ್ಳ ಕಣವೆ ಗಳ ದಾಟುತ್ತಾ ಮುನ್ನಡಿದವಳುಬಯಲ”ಪ್ರಭೆ”ಯ ಅರಸುತ್ತಾ ಕದಳಿಗೆ ನಡೆದವಳು **********************************************
ಗಜಲ್
ಗಜಲ್ ಅರುಣಾ ನರೇಂದ್ರ ಹುಡುಗ ಯಾಕ ನೀ ಹಿಂಗ ಮುಸುಮುಸು ನಗತೀದಿನೀ ಸುಮ್ಮನಿದ್ರೂ ನನಗ್ಯಾಕೋ ನಕ್ಕಂಗ ಕಾಣತೀದಿ ನೀ ಬಿಳಿ ಬಟ್ಟಿ ಉಟಗೊಂಡ್ರ ಬೆಳ್ಳಕ್ಕಿ ಬೆದರತಾವುಗಾಂಧಿ ಟೊಪ್ಪಿಗಿ ಹಾಕ್ಕೊಂಡು ಮದುಮಗನಾಗೀದಿ ಸೋದರ ಮಾವನೆಂದು ಸಲಿಗೀಲಿ ಮಾತಾಡೀನಿಕಣ್ಣ ಕಾಡಿಗಿ ಕದ್ದು ನೀ ಕೊಳ್ಳೆ ಹೊಡದೀದಿ ಬಗಲಿಗೆ ಬಿಂದಿಗೆ ಇಟ್ಟು ಬಳುಕಾಡಿ ಬರುತ್ತಿದ್ದೆಬಾಯಾರಿ ಬಂದು ನೀ ಬೊಗಸೆ ಒಡ್ಡಿ ಕಾಡೀದಿ ಉರಿಬಿಸಿಲ ಬೇಗೆಯಲಿ ಹರದಾರಿ ನಡೆದೀನಿಅರುಣಾ ಎಂತೆಂದ್ಯಾಕ ಕೂಗಿ ಕೂಗಿ ಕರೆದೀದಿ.. *************************************
ಗಜಲ್
ಗಜಲ್ ಸುಜಾತ ಲಕ್ಷ್ಮೀಪುರ. ಕಳಚಿಕೊಂಡು ಸೋಗು ಅಹಂಕಾರ ಮಗುವಾಗಿದ್ದರೂ ನನ್ನ ಬಳಿ ಬರಲಿಲ್ಲ ನನ್ನ ದೇವರುಮನದಲಿ ಭಯ ಆತಂಕ ನೋವು ಪರಿತಾಪವಿದ್ದರೂನನ್ನ ಬಳಿ ಬರಲಿಲ್ಲ ನನ್ನ ದೇವರು ಮಂಜಾನೆ ನೇಸರ ಇರುಳು ಚುಕ್ಕಿ ಚಂದ್ರಮ ನಡುವೆ ಬೀಸುವಗಾಳಿಯೂ ಅವನ ನೆನಪಿಸಿದೆಹಸಿವು ನಿದಿರೆ ಸನಿಹ ಸುಳಿಯದೆ ಧ್ಯಾನದಲ್ಲಿದ್ದರೂ ನನ್ನ ಬಳಿ ಬರಲಿಲ್ಲ ನನ್ನ ದೇವರು ಋತುಮಾನಗಳು ಉರುಳುತ್ತಿವೆ ಚಳಿಗೆ ಚಳಿ ಕಾಣದೆ ಬೇಸಿಗೆ ಸುಡುದೆ ಕೊರಡಾಗಿದೆ ಬದುಕುಕಾಯ ಕರಗಿ ಚಿತ್ತ ಮಾಗಿ ತಾನಳಿದು ಶೂನ್ಯವಾದರೂನನ್ನ ಬಳಿ ಬರಲಿಲ್ಲ ನನ್ನ ದೇವರು ಅವನ ಕಾಣುವುದು ಆಸೆಯೋ ಪಾಶವೋ ಬಾಳಿನ ಗುರಿಯೋ ಅರಿಯದಾಗಿದೆ ಮನಕೆಕಣ್ಣಿನಲಿ ದೀಪ ಉರಿಸಿ,ಮೌನದ ವ್ರತ ತೊಟ್ಟಿದ್ದರೂ ನನ್ನ ಬಳಿ ಬರಲಿಲ್ಲ ನನ್ನ ದೇವರು ಶಿವೆ,ಒಮ್ಮೆ ದರುಶನವಾದರೆ ಸಾಕುಕಣ್ತುಂಬಿಕೊಂಡುನಿನ್ನನ್ನುಸಂತಸದಿಎವೆಮುಚ್ಚಿಬಿಡುವೆಕ್ಷಣ ಕ್ಷಣವು ಕಣಕಣವು ಆರಾಧಿಸಿ ಪೂಜಿಸುತ್ತಿದ್ದರೂ ನನ್ನ ಬಳಿ ಬರಲಿಲ್ಲ ನನ್ನ ದೇವರು.……….
ಗಝಲ್
ಗಝಲ್ ಆಸೀಫಾ ಬೇವು ಬೆಲ್ಲದೊಳಿಟ್ಟು ಕಷ್ಟ ಸುಖದ ಸಾಂಗತ್ಯ ಸಾರುತಿದೆ ಯುಗಾದಿಅಭ್ಯಂಜನವ ಮಾಡಿಸಿ ನವಚೈತನ್ಯ ಚೆಲ್ಲುತಿದೆ ಯುಗಾದಿ. ಹೊಸ ಚಿಗುರಿನ ಹೊದಿಕೆಯಲಿ ಕಂಗೊಳಿಸುತಿವೆ ಗಿಡಮರಗಳುಯುಗದ ಆದಿಯ ನೆನಪಿಸಿ ಹರ್ಷ ಹಂಚುತಿದೆ ಯುಗಾದಿ ಮೈಮರೆತ ದುಂಬಿಗಳ ಝೇಂಕಾರ ಹೊಂಗೆ ಬೇವು ಮಾಮರದ ತುಂಬಾಸವಿಜೇನಿನೊಲವು ಮನದ ಗೂಡುಗಳಲಿ ತುಂಬುತಿದೆ ಯುಗಾದಿ ತಳಿರು ತೋರಣ ಚೈತ್ರದಾಗಮನಕೆ ಸೂಚನೆಯನಿತ್ತು ನಗುತಿದೆಬ್ರಹ್ಮ ಸೃಷ್ಟಿಗೆ ಶಿರಬಾಗಿ ಶತಕೋಟಿ ನಮನ ಹೇಳುತಿದೆ ಯುಗಾದಿ ಹಳೆಯ ಹಗೆಯ ಕಳಚಿ ನಿಲ್ಲೋಣ ವಸಂತನಾಗಮನಕೆ ಎಲ್ಲಾಹೊಸ ವರುಷಕೆ ಕೈಬೀಸಿ ಆಸೀಯ ಕರೆಯುತಿದೆ ಯುಗಾದಿ ********************************









