ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಜಲ್

ಗಜಲ್ ಅರುಣಾ ನರೇಂದ್ರ ನೀ ಹಚ್ಚಿಕೊಳ್ಳುವ ಅತ್ತರಿನದೆ ವಾಸನೆ ಬರುತಿದೆ ಎಲ್ಲಿರುವಿಮೋಹಬ್ಬತ್ತಿನ ಈ ಹಾಡಲ್ಲಿ ನಿನ್ನದೇ ಧ್ವನಿ ಕೇಳುತಿದೆ ಎಲ್ಲಿರುವಿ ಮುಂಜಾನೆಯ ಮಂಜಿನ ಹನಿಗೂ ಕಣ್ಣ ಕನಸುಗಳಿವೆಆಗಸದ ಹಾಳೆಯಲಿ ನೀ ಬರೆದ ಚಿತ್ರ ಕಾಣುತಿದೆ ಎಲ್ಲಿರುವಿ ಮುಂಗುರುಳ ತೀಡುವ ತಂಗಾಳಿ ಇಂದೇಕೋ ಹಠ ಮಾಡುತಿದೆಇಲ್ಲಿ ನೀ ನಡೆದಾಡಿದ ಹೆಜ್ಜೆಗಳ ಗುರುತಿದೆ ಎಲ್ಲಿರುವಿ ಧುಮ್ಮಿಕ್ಕುವ ಪ್ರವಾಹಕ್ಕೆ ಗೋಡೆ ಕಟ್ಟಲಾಗುತ್ತಿಲ್ಲನಿನ್ನ ನಗೆಯ ಅಲೆ ಎದೆಗೆ ಅಪ್ಪುತಿದೆ ಎಲ್ಲಿರುವಿ ಎದುರಿನಲಿ ಸಿಕ್ಕು ಬಿಡು ಒಮ್ಮೆ ಹೀಗೇಕೆ ಹಿಂಬಾಲಿಸುತ್ತಿಅರುಣಾಳ ಅಂತರಾತ್ಮ ನಿನ್ನನ್ನೇ ಧ್ಯಾನಿಸುತಿದೆ ಎಲ್ಲಿರುವಿ ********************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ರತ್ನರಾಯ ಮಲ್ಲ ಇಲ್ಲಿ ಚುನಾವಣೆಯ ಹಸಿವು ಹೆಚ್ಚಾಗುತಿದೆಮುಖಂಡರುಗಳ ಓಡಾಟವು ಹೆಚ್ಚಾಗುತಿದೆ ಗಲ್ಲಿ-ಗಲ್ಲಿಗಳಲ್ಲಿ ಓಟು-ನೋಟಿನದ್ದೆ ಮಾತುಮನೆ-ಮನಗಳಲ್ಲಿ ಮತ್ಸರವು ಹೆಚ್ಚಾಗುತಿದೆ ಶಾಂತಿಗಾಗಿ ಅವಿರೋಧವೆ ಚಂದ ಎನ್ನುವರುಕೋಟಿ ಕಬಳಿಸುವ ದಾಹವು ಹೆಚ್ಚಾಗುತಿದೆ ಊರು ಉದ್ಧಾರದ ಮಾತುಗಳು ಕೇಳುತಿವೆದೊಡ್ಡವರಲ್ಲಿ ತಿನ್ನುವ ಗುಣವು ಹೆಚ್ಚಾಗುತ್ತಿದೆ ಬೇಲಿಯೇ ಎದ್ದು ಹೊಲ ಮೇಯುತಿದೆ ‘ಮಲ್ಲಿ’ಜನರ ಮನಸುಗಳಲ್ಲಿ ಕ್ರೋಧವು ಹೆಚ್ಚಾಗುತಿದೆ ******************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶುಭಲಕ್ಷ್ಮಿ ಆರ್ ನಾಯಕ ಇತರರ ಅಲ್ಲ ಸಲ್ಲದ ನುಡಿಗೆ ನೋಯದಿರು ಗೆಳತಿಪರರು ಆಡುವ ಬಿರುನುಡಿಗಳಿಗೆ ಅಂಜದಿರು ಗೆಳತಿ ನಿನ್ನಾತ್ಮ ಸಾಕ್ಷಿಯದು ನಿಜವನ್ನೇ ನುಡಿಯುವಾಗಕುಹಕಿಗಳ ಕುಹಕಕ್ಕೆ ಮನಕೆಡಿಸಿಕೊಳದಿರು ಗೆಳತಿ ಧರಣಿಯ ಮನುಜರಲ್ಲಿ ಮಾನವೀಯತೆಯ ತುಂಬಲುವ್ಯರ್ಥವಾಗಿ ಎಂದಿಗೂ ನೀನು ಹೆಣಗದಿರು ಗೆಳತಿ ಕೊಡುವ ದಾನ ಧರ್ಮಗಳಲಿ ಪುಣ್ಯವಿದೆ ಎಂದರಿತುಅಪಾತ್ರರಿಗೆ ದಾನ ಧರ್ಮವನು ಮಾಡದಿರು ಗೆಳತಿ ಸಾಂತ್ವನವ ನಯದಿ ಹೇಳುತ ಧೈರ್ಯ ನೀಡುವೆಯೆಂದುಸಂಕುಚಿತಮನದವರಿಗೆ ಉಪದೇಶಿಸದಿರು ಗೆಳತಿ ನಂಬಿಕೆ ವಿಶ್ವಾಸದಲಿ ಧೈರ್ಯ ತುಂಬುವ ಜನರನುನಿನ್ನ ಕಠೋರತೆಯಿಂದ ದೂರ ತಳ್ಳದಿರು ಗೆಳತಿ ಎಲ್ಲರೂ ಎಲ್ಲರ ಒಳಿತನೆ ಬಯಸುತ್ತಿರುವಾಗಜೀವನದಲಿ ಜಂಜಾಟದಿಂದ ಕುಗ್ಗದಿರು ಗೆಳತಿ ಅರಿತು ಬಾಳಿದರೆ ಜಗದಲಿ ಮುಳ್ಳು ಹೂವಾಗುವುದುಸಹನೆಯಿಂದ ಬಾಳ ನೂಕುವುದ ಮರೆಯದಿರು ಗೆಳತಿ ಆತ್ಮಸಾಕ್ಷಿಯಿಂದ ಒಳಿತ ಬಯಸಿದೆ ಶುಭಳ ಮನವುಅರಿಯದೇ ಅದನು ನೀ ಸುಮ್ಮನೆ ರೇಗದಿರು ಗೆಳತಿ ********************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ವಿನುತಾ ಹಂಚಿನಮನಿ ಹುಟ್ಟಿನಿಂದ ಚಟ್ಟದ ವರೆಗೆ ಹೆಣ್ಣಿಗೆ ಅಸ್ತಿತ್ವಕ್ಕಾಗಿ ಹೋರಾಟಸಿಕ್ಕ ಬದುಕ ಭವಸಾಗರದಲಿ ಈಜಿ ದಾಟುವದಕ್ಕಾಗಿ ಹೋರಾಟ ತಾಯಿಯ ಗರ್ಭದಲ್ಲಿರುವ ಹೆಣ್ಣುಭ್ರೂಣ ನೇಣು ತಪ್ಪಿಸಲು ಸೆಣಸಾಟಪುರುಷಪ್ರಧಾನ ಲೋಕದಲಿ ಪ್ರಾಣಸಹಿತ ಬರುವದಕ್ಕಾಗಿ ಹೋರಾಟ ಒಡಹುಟ್ಟಿರುವ ಅಣ್ಣ ತಮ್ಮಂದಿರೊಂದಿಗೆ ಹಕ್ಕಿಗಾಗಿ ಪರದಾಟಕನಿಷ್ಠ ವಿದ್ಯೆ ಅನ್ನ ಬಟ್ಟೆಯ ಪಾಲು ಪಡೆಯುವದಕಾಗಿ ಹೋರಾಟ ಯೌವನಾವಸ್ಥೆಯಲ್ಲಿ ಕಾಮುಕರಿಂದ ಅತ್ಯಾಚಾರದ ಕೆಣಕಾಟಕನ್ಯೆಗೆ ಬಹುಮೂಲ್ಯ ಶೀಲ ಕಾಯ್ದುಕೊಳ್ಳುವದಕ್ಕಾಗಿ ಹೋರಾಟ ಪತ್ನಿಯ ಬೇಕು ಬೇಡಗಳ ಹತ್ತಿಕ್ಕುತ ಬಾಳ ಬಂಡಿಯ ಎಳೆದಾಟಅವಲಂಬಿತರ ಅವಶ್ಯಕತೆಗಳ ಪೂರೈಸುವದಕ್ಕಾಗಿ ಹೋರಾಟ ಇಳಿವಯಸ್ಸಿನಲಿ ಪರಾಧೀನತೆ ತಂದ ಅವಮಾನದಿಂದ ಸಂಕಟವಿನುತಳ ಜೀವನ ಸಂಜೆಯಲಿ ಪತಿಸುತರ ಆಸರೆಗಾಗಿ ಹೋರಾಟ *********************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್‌

ಗಜಲ್ ಪ್ರಭಾವತಿ ಎಸ್ ದೇಸಾಯಿ ಬಳ್ಳಿಯಂತೆ ಬಳಕುತ ಗೆಜ್ಜೆ ಸದ್ದಲಿ ಜಗ ಗೆಲ್ಲುವ ಆಸೆಕಣ್ಣ ನೋಟದಲಿ ಹೂ ಬಾಣ ಹೂಡಿ ಹೃದಯ ಕೊಲ್ಲುವ ಆಸೆ ಎದೆ ಹೊಲದಲಿ ಗೆಜ್ಜೆ ಹೆಜ್ಜೆ ಮೂಡಿಸುತ ಹೊಸ ಹಾದಿ ಮಾಡಿದೆಒಲವಿನ ಅಮಲೇರಿಸುವ ಹನಿ ಹನಿ ಶರಾಬು ಚೆಲ್ಲುವ ಆಸೆ ಪ್ರೀತಿಯ ಬನದಲಿ ಚಿಗುರಿದ ಹೂ ಕಾಯಿ ಹಣ್ಣು ಮನ ಸೆಳೆಯುತಿವೆಅನುರಾಗದ ತೋಟದಲ್ಲಿನ ಮಾಗಿದ ಮಾವು ಮೆಲ್ಲುವ ಆಸೆ ಮನದಂಗಳದಲಿ ಗರಿಬಿಚ್ಚಿದ ನಾಟ್ಯ ಮಯೂರಾಗಿ ಕುಣಿದೆಬೆರಗು ಮೂಡಿಸುವ ಚೆಲುವ ಶಿಲಾ ಬಾಲೆಯಾಗಿ ನಿಲ್ಲುವ ಆಸೆಗೆ ಮೃದಂಗದ ನಾದ ತಾಳಕ್ಕೆ ತುಂಡಾಯಿತು ನೂಪುರ ಮಾಲೆಅವನ ಧ್ಯಾನ “ಪ್ರಭೆ”ಯಲಿ ತಲೀನಳಾಗಿ ಸೋಲುವ ಆಸೆ ************************************

ಗಜಲ್‌ Read Post »

ಕಾವ್ಯಯಾನ, ಗಝಲ್

ಗಜಲ್‌

ಗಜಲ್ ರತ್ನರಾಯಮಲ್ಲ ಮಕ್ಕಳಾಡುವ ಅದಲು-ಬದಲು ದೊಡ್ಡವರು ಆಡುತಿದ್ದಾರೆ ಇಂದುದಡ್ಡತನದಿಂದ ಸಮಾಜದ ನೆಮ್ಮದಿಗೆ ವಿಷ ಹಾಕುತಿದ್ದಾರೆ ಇಂದು ತಲೆ ಹಿಡಿಯುವವರ ದಂಡು ಕೌರವರನ್ನೂ ಮೀರಿಸುತ್ತಿದೆ ಇಂದುಸಾಕ್ಷರರೆ ಮೌಲ್ಯಗಳನು ರಣಹದ್ದುಗಳಂತೆ ತಿನ್ನುತಿದ್ದಾರೆ ಇಂದು ಶೀಲವು ಹಣದ ನಶೆಯಲ್ಲಿ ಶಿಥಿಲವಾಗುತಿರುವುದೆ ಹೆಚ್ಚು ಇಂದುವಾಸನೆಯಲ್ಲಿ ಪರಿಚಿತರೆ ಅಪರಿಚಿತರಾಗಿ ಕೊಲ್ಲುತಿದ್ದಾರೆ ಇಂದು ಮಾಂಸ ಮಾರುವ ಸಂತೆಯಲ್ಲಿ ಮನಸ್ಸು ಅನಾಥವಾಗಿ ನರಳುತಿದೆನಮ್ಮವರೇ ನಮ್ಮ ಮಾನ ಹರಾಜು ಮಾಡಲು ಕಾಯುತಿದ್ದಾರೆ ಇಂದು ಕಲಬೆರಕೆಯ ತಾಂಡವ ಪ್ರೀತಿಯಲ್ಲಿ ಸಹಿಸಲು ಆಗುತಿಲ್ಲ ‘ಮಲ್ಲಿ’ಯಾರನ್ನೂ ದೂರಲಾಗದೆ ಜನರು ದಿನಾಲೂ ಸಾಯುತಿದ್ದಾರೆ ಇಂದು ***************************

ಗಜಲ್‌ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸಿದ್ಧರಾಮ ಕೂಡ್ಲಿಗಿ ಮನದ ದುಗುಡ ಕಳೆಯಲಿಕ್ಕೆ ಇರುವುದೊಂದು ಕಿಟಕಿ ಜಗದ ತಮವ ತೊಡೆಯಲಿಕ್ಕೆ ಇರುವುದೊಂದು ಕಿಟಕಿ – ಅರಿವ ಕುಡಿದು ಎದೆಯ ತೆರೆದು ಮೂಡಿತೊಂದು ಕನಸು ಬಯಲ ಹಕ್ಕಿ ಮೇಲೆ ಹಾರಲಿಕ್ಕೆ ಇರುವುದೊಂದು ಕಿಟಕಿ – ಏನೊಂದೂ ಇರದ ತಾಣದಿಂದ ತೇಲಿ ಬಂತೊಂದು ರಾಗ ರಾಗದೊಳಗೆ ರಾಗ ಮೂಡಲಿಕ್ಕೆ ಇರುವುದೊಂದು ಕಿಟಕಿ – ಸೂರ್ಯ ಚಂದ್ರ ತಾರೆ ಧೂಮಕೇತು ಮತ್ತದೇ ಕಾಲಚಕ್ರ ಜೀವಸೆಲೆಯ ಸುರುಳಿ ಮೂಡಲಿಕ್ಕೆ ಇರುವುದೊಂದು ಕಿಟಕಿ – ನೊಂದು ಬೆಂದು ದಹಿಸಿಕೊಂಡು ಅರಳಿತೊಂದು ಹೂವು ನೆಲದ ಒಡಲ ಹಾಡು ಕೇಳಲಿಕ್ಕೆ ಇರುವುದೊಂದು ಕಿಟಕಿ **************************************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸಿದ್ದರಾಮ ಹೊನ್ಕಲ್ ಹೇಳಬೇಕಾದ ಮಾತೆಲ್ಲವನು ಹೇಳಿಯಾಯಿತು ಮತ್ತೇನು ಮಾಡಲಿಕೇಳಬೇಕಾದ ಮಾತೆಲ್ಲ ಮತ್ತೆ ಕೇಳಿಯಾಯಿತು ಮತ್ತೇನು ಮಾಡಲಿ ತಿಳಿಯದವರಿಗೆ ತಿಳಿಸಬಹುದು ತಿಳಿದು ಮೌನ ಆದರೇನು ಮಾಡಲಿಮನದ ಬಯಕೆ ಬಾಯಿಬಿಟ್ಟು ಕಂಗಾಲಾಯಿತು ಮತ್ತೇನು ಮಾಡಲಿ ಕಾಯ ಕಾಯಬೇಕು ನಿಜ ಆ ಕಾಯುವಿಕೆಗೆ ಕೊನೆ ಯಾವಾಗಪಿಸುಮಾತು ಬಿಸುಮಾತಾಗಿ ಆಟವಾಯಿತು ಮತ್ತೇನು ಮಾಡಲಿ ಪ್ರೀತಿಯಲಿ ಬಿದ್ದವರೆಲ್ಲ ಹುಚ್ಚರೆಂಬ ಸತ್ಯ ಇಡೀ ಜಗವು ಬಲ್ಲದುಸತ್ಯ ಹುಚ್ಚೆನಿಸಿ ಬಾಗಿಲು ಮುಚ್ಚಿಯಾಯಿತು ಮತ್ತೇನು ಮಾಡಲಿ ಹೇಳಿ ಕೇಳಿ ಬೇಸತ್ತು ಬಸವಳಿದು ಹೋಗಿಹನು ನೀ ಬಲ್ಲೆ ಸಾಕಿತರವಲ್ಲ ತಿಳಿ ನೀ ಬರೀ ಕಾಡುವದಾಯಿತು ಮತ್ತೇನು ಮಾಡಲಿ ತನ್ನ ಪಾಡಿಗಿದ್ದವನ ಸುತ್ತ ಸುಳಿದು ಹುಚ್ಚುಹಚ್ಚಿ ಕೈ ಬಿಡೋದು ನ್ಯಾಯವೆಕಷ್ಟ ಸುಖದ ನಾಲ್ಕುಮಾತು ಇಲ್ಲವಾಯಿತು ಮತ್ತೇನು ಮಾಡಲಿ ಅದಕೆ ಜಿಪುಣತನ ಬಂದರೆ ಬರಗೆಟ್ಟ ಹೊನ್ನು’ ಬದುಕಿಗೆ ಏನರ್ಥ ಸಾಕಿಮನೆ ಮನ ಇಡೀ ಜೀವ ಕಾಯುವದಾಯಿತು ಮತ್ತೇನು ಮಾಡಲಿ *********************************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶ್ರೀ ಲಕ್ಷ್ಮಿ ಅದ್ಯಪಾಡಿ ನಿನ್ನ ಉಸಿರ ರಾಗಕ್ಕಾಗಿ ಹುಡುಕಾಡುತ್ತಿರುವೆನಿನ್ನ ಒಲವ ಪಿಸುನುಡಿಗಾಗಿ ಹುಡುಕಾಡುತ್ತಿರುವೆ.. ಕದ್ದು ನೋಡುವ ಸಾವಿರಾರು ಕಣ್ಣುಗಳ ನಡುವೆನಿನ್ನ ಪ್ರೇಮದ ನೋಟಕ್ಕಾಗಿ ಹುಡುಕಾಡುತ್ತಿರುವೆ.. ನನ್ನ ಕುಡಿ ನೋಟಕ್ಕೆ ಕಾದಿವೆ ನೂರು ಭ್ರಮರಗಳುಕೆನ್ನೆ ಸವರಿದ ಪುಟ್ಟ ಹೂವಿಗಾಗಿ ಹುಡುಕಾಡುತ್ತಿರುವೆ.. ಬಣ್ಣಗಳಲ್ಲಿ ಅದ್ದಿದ ಸಾವಿರ ಕುಂಚಗಳು ಕಾದಿವೆನಿನ್ನ ನೆನಪಿನ ಒಂದು ರೇಖೆಗಾಗಿ ಹುಡುಕಾಡುತ್ತಿರುವೆ ಜಗದ ಬನದೊಳು ಅರಳಿವೆ ವಿಧವಿಧವಾದ ಹೂಗಳುಒಡಲ ಕಂಪು ಸೂಸಿದ ಕಸ್ತೂರಿಗಾಗಿ ಹುಡುಕಾಡುತ್ತಿರುವೆ *****************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸಿದ್ದರಾಮ ಹೊನ್ಕಲ್ ನಿನ್ನ ನೋಟ ಬಲು ಹಿತ ನೀಡಿದೆ ನೀ ಕಾಡಿಸುತ್ತ ಕೂಡಬೇಡದಿನಗಳು ದೀರ್ಘವಾಗಿಹವು ಆ ಮಾತನೇ ನೀ ಮುತ್ತಾಗಿಸಬೇಡ ನನ್ನ ಕಣ್ಣ ರೆಪ್ಪೆಗಳು ಕಣ್ಢೀರ ಬಿಸಿಗೆ ಕಣ್ಣೀರು ಮಿಡಿದಿವೆಕಲ್ಲು ಹೃದಯವಲ್ಲ ನಿನ್ನದು ಇಷ್ಟು ಕಠೋರ ನಟನೆಬೇಡ ಬೀಸುವ ತಂಗಾಳಿ ಸೂರ್ಯಚಂದ್ರರ ಸಹಜತೆ ಬೇಡವೆಜಗಕೆ ಬಂದವರಿಗೆಲ್ಲ ಒಂದೊಂದು ಬವಣೆ ನೀ ಚಿಂತಿಸಬೇಡ ನಾನೊಂದು ತೀರ ನೀನೊಂದು ತೀರವೆಂದು ನೊಂದೆಯಲ್ಲಾಮಧ್ಯೆ ಹರಿವ ಪ್ರೇಮದ ಹರಿವು ತಿಳಿಯದೇ ನೀ ಇರಬೇಡ ಇಂದಲ್ಲಾ ನಾಳೆ ವಜ್ರಲೇಪಿತ ಕುಸುಮ ಸುಖದಿ ಅರಳಿತುಕಳವಳಿಸದಿರು ಏಲೇ ಮನವೇ ಹತಾಶದಿ ನೀ ಸೋಲಬೇಡ ಮಧುರ ಪ್ರೇಮವಿಲ್ಲದೇ ಈ ಜೀವಕೆ ಜೀವನ ಬೇಕೆ ಸಾಕಿಹೊನ್ನು’ಲಕ್ಷ ಭಾವತುಂಬಿ ಪ್ರೀತಿ ದಕ್ಕದ ಫಕೀರ ಆಗಿಸಬೇಡ **********************************

ಗಜಲ್ Read Post »

You cannot copy content of this page

Scroll to Top