ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

“ಸ್ನೇಹದ ಕಡಲು”  ವಿಜಯಲಕ್ಷ್ಮಿ ಹಂಗರಗಿ

ಕಾವ್ಯ ಸಂಗಾತಿ  ವಿಜಯಲಕ್ಷ್ಮಿ ಹಂಗರಗಿ ಸ್ನೇಹದ ಕಡಲು ಹಲವು ನದಿಗಳು ನಿನ್ನೊಂದಿಗೆ ಬೆರೆತಿವೆವೈವಿಧ್ಯಮಯ ಜೀವರಾಶಿ ಒಡಲೊಳಗೆ ಅಚ್ಚರಿಯಜೀವ ರಾಶಿ ಅಡಗಿದೆನೀನಲ್ಲವೇ ಸ್ನೇಹ ಕಡಲು ಒಲವಿನ ಒಡಲು // ಮನುಷ್ಯನೊಂದಿಗೆ ಅವಿನಾಭಾವ ಸಂಬಂಧನೀನಿಲ್ಲದೆ ಬದುಕಿಲ್ಲ ವೈವಿಧ್ಯಮಯ ಮೀನುಗಳುನಿನ್ನ ಉದರದಲ್ಲಿ ಅಡಗಿವೆ ನೀನೊಂದು ಅದ್ಭುತಅವಿಸ್ಮರಣೀಯತಾಣ!ಜನಮಾನಸದಲ್ಲಿಉಳಿಯುವ ಸಂಭ್ರಮದ ಕ್ಷಣ… ಬಣ್ಣ ಬಣ್ಣದ ಸುಂದರ ಮೀನುಗಳು, ಸಸ್ತನಿಚಿಕ್ಕ- ದೊಡ್ಡ , ಉದ್ದಗಲ ಬೃಹಕಾರದ ಜಲಚರಗಳುಹವಳ ಮುತ್ತುಗಳರಾಶಿ ಸುರಿದಿದೆ ಅಂಗಳದಲ್ಲಿ ಆಡಿನಲಿವ ಹೂ… ಮೊಸಳೆ ತಿಮಿಂಗಿಲಗಲಿಗಿಲ್ಲ ಭಯ!ನಿನ್ನ ಹೃದಯದಲ್ಲಿ ಆಡುವ ಅಪೂರ್ವ ಜೀವರಾಶಿಗಳು ಆಳಕ್ಕೆ ಹೋದಂತೆಲ್ಲ ಕುತೂಹಲ ಅಗೋಚರ ಜಲಚರಗಳು ಅವುಗಳ ಅಡಿಯಲ್ಲಿ ಅನೇಕ ಬಗೆಯ ಸಸ್ತನಿಗಳು ಕಣ್ಮನ ಸೆಳೆಯುವ ಅಂದಮಾನವ ಸ್ನೇಹಿ ಕಡಲು… ನಿನ್ನ ಏರಿಳಿತ ಕುಣಿತ ನೋಡಲೇಷ್ಟು ಚಂದ ಸುಂದರ ಸಂಜೆ ಸಮಯ ನಿನ್ನ ಅಬ್ಬರ ಹೇಳತಿರದು, ಹುಣ್ಣಿಮೆಯ ದಿನವಂತೂ ನಿನ್ನ ನೋಡಲು ಸಾಗರೋಪಾದಿಯಲ್ಲಿ ಬರುವರು ಜನಅನತಿ ದೂರದಿಂದ ಬರುವ ನಿನ್ನ ಅಲೆಗಳೊಂದಿಗೆ ಚೆಲ್ಲಾಟ… ಆಡುವ ಮಕ್ಕಳು ಯುವ ಪ್ರೇಮಿಗಳು ವೃದ್ಧರು ಕೈ ಕಾಲು ಬಡಿಯುತ್ತಾಬಡಿತದ ರಬಸಕ್ಕೆ ನೀರು ಮುತ್ತಿನಂತೆ ಮುತ್ತನ್ನು ಚೆಲ್ಲಿದಂತೆ ಸಾಗರಕ್ಕೆ ಬೀಳುವ ಆ ಮನೋಹರ ದೃಶ್ಯ ಕಣ್ಮನ ತುಂಬಲು ಹರುಷ …. ಸೂರ್ಯೋದಯ, ಸೂರ್ಯಾಸ್ತದಿ ಕೆಂಪು ದೀಪ ಉರಿದಂತೆ ಬಂಗಾರದ ನೇಸರ ಹರಡಿದಂತೆ ಚೆಲುವಿನ ಚಿತ್ತಾರ ನಯನ ಮನೋಹರ ನೋಟ ಪ್ರೇಮಿಗಳ ಸ್ನೇಹ ಕಡಲು ನೀನು… ಎತ್ತ ನೋಡಿದತ್ತ ನೀರೇ ನೀರು ಮುಗಿಲು ಭೂಮಿ ಕೂಡಿದಂತೆ ನೋಟ ಅಲ್ಲಲ್ಲಿ ಗಿಡಗಳಿಂದ ಆವರಿಸಿದ ದ್ವೀಪಗಳು ಹಡಗು ಬೊಟಿನಲ್ಲಿ ರಮ್ಯ ಸ್ಥಾನಗಳ ವೀಕ್ಷಿಸಲು ಪಯಣ… ಕಡಲ ತಟದಿ ಎತ್ತರದ ತೆಂಗಿನ ಮರ, ವಿಲ್ಲಾಗಳು ಸುಂದರ ಸೊಬಗುಸಾಗರ ತಟದಲ್ಲಿ ಹರಡಿರುವ ಮರಳು ಅಲ್ಲಲ್ಲಿ ಶಂಖ ಚಿಪ್ಪುಗಳ ಬಣ್ಣ ಬಣ್ಣದ ಸುಂದರ ಕಲ್ಲುಗಳ ಮಧ್ಯೆ ಬರಿಗಾಲಿನದಿ ನಡೆದಾಡುವ ಹೆಜ್ಜೆಯ ಗುರುತು ಅಬ್ಬ ಎಂಥಹ ಸುಂದರ ನೋಟ … ಮೀನುಗಾರರಿಗೆ ಅಲ್ಲಿಯ ನಿವಾಸಿಗಳಿಗೆ ನೀನು ಕೊಟ್ಟಿರುವ ಈ ಬದುಕುನೀನಿರದಿದ್ದರೆ ಅವರದು ಬವಣೆ ಊಹಿಸಲು ಅಸಾಧ್ಯ!ಜೀವನಕ್ಕೆ ಜೀವ ಕೊಟ್ಟ ನಿಧಿ ನೀನುಸ್ನೇಹದ ಕಡಲು ನೀನು… ನೀ ಮುನಿಯಲು ಸುನಾಮಿ ಸಂಕಟ ಮುಗಿಲೆತ್ತರಕ್ಕೆ ಆರ್ಭಟ ಊರಿಗೆ ಊರು ಜಲ ಸಮಾಧಿ ಅರ್ಭಟಿಸುವೆಆರ್ಭಟಿಸಿ ಹುಟ್ಟಿಸದಿರು ದ್ವೇಷ ಕಳೆದು ಸ್ನೇಹ ಪ್ರೀತಿ ನೀಡು ಸಕಲ ಜೀವಕೆ ಜೀವಾತ್ಮ ನೀನೇ ಸ್ನೇಹದ ಕಡಲು… ಬಸವಾದೀಶರಣರಂತೆ ಶಾಂತ ಸಾಗರ ಜಗದ ನೋವನ್ನುಂಡು ಪ್ರಶಾಂತ ಮೆರೆದ ಕಡಲು, ಒಡಲು ನೀಏಕ ಚಿತ್ತದಿ, ಪ್ರಸನ್ನತೆಯಿಂದ ಕೂಡಿದ ಮಡಿಲು ನಿನ್ನದುನಿನ್ನಂತೆ ನಾನಾಗುವೆ ಸ್ನೇಹದ ಕಡಲು… ————- ವಿಜಯಲಕ್ಷ್ಮಿ ಹಂಗರಗಿ

“ಸ್ನೇಹದ ಕಡಲು”  ವಿಜಯಲಕ್ಷ್ಮಿ ಹಂಗರಗಿ Read Post »

ಕಾವ್ಯಯಾನ

“ನನ್ನವನ ಸ್ವಗತ, ನೀನಿಲ್ಲದೆ” ಡಾ.ಮೀನಾಕ್ಷಿ ಪಾಟೀಲ್

ಕಾವ್ಯ ಸಂಗಾತಿ “ನನ್ನವನ ಸ್ವಗತ, ನೀನಿಲ್ಲದೆ” ಡಾ.ಮೀನಾಕ್ಷಿ ಪಾಟೀಲ್ ನನ್ನವನ ಸ್ವಗತ ನೀನಿಲ್ಲದೆ….. ಏಳಬೇಕು ಎಬ್ಬಿಸಲು ನೀನಿಲ್ಲಅಲಾರಾಂ ಹೊಡೆದುಕೊಳ್ಳುತ್ತದೆಈಗ ನಿನಗೆ ನಾನೇ ಗತಿ ಏಳುತ್ತೇನೆ ಅಡುಗೆ ಮನೆ ಕಡೆ ನೋಡುತ್ತೇನೆ.ಬಳೆಗಳ ಸದ್ದಿಲ್ಲದೆ ಸುಮ್ಮನಾಗುತ್ತೇನೆಪೆದ್ದನಂತೆ ಬಿಸಿ ನೀರು ಕಷಾಯ ಕಾಫಿ ಕುದಿಸುವವರಿಲ್ಲನಾನೇ ಕುದಿಯುತ್ತೇನೆ ಒಮ್ಮೊಮ್ಮೆಎದುರಾಳಿ ನೀನಿಲ್ಲದೆ ಕಸಗುಡಿಸಿ ನೀರು ಚಿಮುಕಿಸುತ್ತೇನೆತಳಿವುಂಡ ಅಂಗಳ ಅಣಕಿಸುತ್ತದೆರಂಗೋಲಿ ಎಳೆಯುವ ನೀನಿಲ್ಲದೆ ಅಡುಗೆ ಮನೆಯೊಳಗೆ ಬರುತ್ತೇನೆಏನಾದರೊಂದನ್ನು ಬೇಯಿಸಿಕೊಳ್ಳಲೇಬೇಕುಹೊರಗಡೆ ಏನನ್ನು ತಿನ್ನುವ ಹಾಗಿಲ್ಲ ಮೂರು ಗೆರೆ ದಾಟಲಾರದ ಸಂಕಟಕೈಸುಟ್ಟುಕೊಳ್ಳುವುದುಅನಿವಾರ್ಯ ನಾನು ನಳನಂತೆ ಅಲ್ಲದಿದ್ದರೂ ಒಲೆಯ ಮೇಲಿಟ್ಟ ಹಾಲು ಉಕ್ಕದಂತೆಮಾಡಲಿಟ್ಟ ಉಪ್ಪಿಟ್ಟು ತಳ ಹತ್ತದಂತೆನೋಡಿಕೊಳ್ಳಬೇಕು ಮೈ ತುಂಬಾ ಕಣ್ಣಾಗಿ ಸ್ನಾನಕ್ಕೆ ಬಿಟ್ಟುಕೊಂಡ ಬಿಸಿನೀರುತುಂಬಿ ಹೊರ ಚೆಲ್ಲುತ್ತದೆಗ್ಯಾಸ್ ವೇಸ್ಟ್ ಆಗುತ್ತೆ ಎಂದು ಮಕ್ಕಳಿಗೆ ಬಯ್ಯುವನಾನು ಈಗ ಅವಳಿಲ್ಲದೆ ನಾನೇ ಮಗುವಾಗಿದ್ದೇನೆ ಏನೊಂದು ತೋಚದು ಅವಸರದಲ್ಲಿಟಿಫಿನ್ ಬಾಕ್ಸ್ ಸಿದ್ಧಗೊಳಿಸಿಕೊಳ್ಳುವುದುದೊಡ್ಡ ಯುದ್ದದಿನವೂ ಅವಳ ಮೆನು ಮೆಸೇಜ್ನೋಡಿ ಸಾಕಾಗಿ ಬಿಟ್ಟಿದೆ ಸ್ವೀಟ್ ಅಂತೆ ಹಣ್ಣಂತೆ ಕಾಳುಗಳಂತೆಮತ್ತೆ ಮೇಲೆ ಟಿಫನ್ ಅಂತೆಅಯ್ಯೋ…. ಯಾಕಾದರೂಹೋದಳೊ ಇವಳು ಊರಿಗೆ ಏನಾದರೊಂದು  ಮರೆಯುತ್ತೇನೆಗಡಿಬಿಡಿಯಲ್ಲಿ ಪುಸ್ತಕ ಪೆನ್ನು ಡೈರಿಒಮ್ಮೊಮ್ಮೆ ಮೊಬೈಲ್ ಬೈಕ್ ಕೀ ಮತ್ತೆ ಒಳಗೆ ಬರುತ್ತೇನೆಹಿಂಬಾಗಿಲು ಮುಂಭಾಗಲುಲಾಕ್ ಮಾಡಿದ್ದೇನೊ ಇಲ್ಲವೋಎನ್ನುವ ಸಂಶಯ ಹೀಗೆ …. ಅವಳು ಹೋದಾಗಿನಿಂದದಿನಚರಿಯ ದಿಕ್ಕು ತಪ್ಪಿದೆ ————– ಡಾ. ಮೀನಾಕ್ಷಿ ಪಾಟೀಲ್

“ನನ್ನವನ ಸ್ವಗತ, ನೀನಿಲ್ಲದೆ” ಡಾ.ಮೀನಾಕ್ಷಿ ಪಾಟೀಲ್ Read Post »

ಕಾವ್ಯಯಾನ

ಗೀತಾ ಆರ್‌ ಅವರ ಕವಿತೆ “ನಿನ್ನ ನಯನ”.

ಕಾವ್ಯ ಸಂಗಾತಿ ಗೀತಾ ಆರ್‌ ಅವರ ಕವಿತೆ “ನಿನ್ನ ನಯನ” ಸಂಭಾಷಣೆ ಸಮ್ಮಿಲನ ನಿನ್ನ ಆನಯನಗಳಲ್ಲಿ…ಆಡದೇ ಉಳಿದಿರುವ ಮಾತುಸಾವಿರಾರು….ನಿರ್ಮಿಸಿರುವೆ ಮನದೊಳಗೊಂದುವೇದಿಕೆ ನಿನಗಾಗಿ…ನಾನಂದು ಅಗಲಿಕೆ ನೋವಿನಲ್ಲೂಅರಸುತ್ತಿದೆ ನಿನ್ನ ಇರುವಿಕೆ…ಮಾಸಾದಿದ್ದ ನಿನ್ನ ನೆನಪುಗಳೆಲ್ಲಾಮರೀಚಿಕೆಯಾಯಿತು….ಎಲೆ ಮರೆಯ ಕಾಯಿಯಂತೆ ಅದುಕಾಣದಾಯಿತು…ನಾನೆಲ್ಲೋ ನೀನೆಲ್ಲೋ ಬದುಕಿನಬಾಳಾಪಯಣದಲೀ….ನೀನ್ಯಾರೋ ನಾನ್ಯಾರೋ ಊರದಾರಿಯಲ್ಲಿ….ವರುಷ ಉರುಳಿತು ಮಾಸ ಕಳೆಯಿತುತಡೆವರಾರು ಕಾಲಾವ…. ————   ಗೀತಾ ಆರ್.

ಗೀತಾ ಆರ್‌ ಅವರ ಕವಿತೆ “ನಿನ್ನ ನಯನ”. Read Post »

ಕಾವ್ಯಯಾನ

ನೀನೆಂದರೆಪ್ರೀತಿ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಕಾವ್ಯ ಸಂಗಾತಿ ನೀನೆಂದರೆಪ್ರೀತಿ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ನೀನೆಂದರೆ ಪ್ರೀತಿ ಬವಣೆ ಕಳೆದ ಭರವಸೆ ರೀತಿಭಾವ ತವರ ಪ್ರೇಮನಿನ್ನೊಲುಮೆ ಸ್ನೇಹನೆಲದ ಮರೆಯ ಹೇಮನಿನ್ನ ಗುಣ ಮನಸಿರಿ ಸಗ್ಗದ ತಾಣಸುಳಿವ ಗಾಳಿಯನಡುವೆ ಅರಳುಮಲ್ಲಿಗೆ ಹೂವುನಿನ್ನ ಪ್ರೇಮದಲಿಮರೆವೆ ನೋವುನೀನೆಂದರೆ ಪ್ರೀತಿ________________________ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ನೀನೆಂದರೆಪ್ರೀತಿ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಕಾವ್ಯಯಾನ

“ವಿಷ ಮನಸ್ಕರು”ಹಮೀದ್ ಹಸನ್ ಮಾಡೂರು

ಕಾವ್ಯ ಸಂಗಾತಿ “ವಿಷ ಮನಸ್ಕರು” ಹಮೀದ್ ಹಸನ್ ಮಾಡೂರು ಕುಟುಕುವವರುಇರುವಷ್ಟು ದಿನವೂಬದುಕಿಗದು ಪಾಠವಯ್ಯ! ಪದಾರ್ಥದಲ್ಲಿ…..ಒಗ್ಗರಣೆಯಿದ್ದರೇ ತಾನೇನಾಲಗೆಗೆ ಅದು ರುಚಿಸುದಯ್ಯ! ಜೊತೆಗಾರರೇ…..ಕೊಕ್ಕೆ ಇಟ್ಟು ಎಳೆದಾಗದುಃಖ ಸಹಜ ಅನುಭವಿಸಯ್ಯ! ದೂರವಿರುವುದೇ ಲೇಸುಸಂಶಯಾಸ್ಪದಕರೆಂದು ನಮ್ಮವರಲ್ಲಸೈತಾನನ ಸಹಚರರು,ತಿಳಿದು ಬಾಳಯ್ಯ!————————————————ಹಮೀದ್ ಹಸನ್ ಮಾಡೂರು.

“ವಿಷ ಮನಸ್ಕರು”ಹಮೀದ್ ಹಸನ್ ಮಾಡೂರು Read Post »

ಕಾವ್ಯಯಾನ

ಎಮ್ಮಾರ್ಕೆ ಅವರ ಗಜಲ್

ಕಾವ್ಯ ಸಂಗಾತಿ ಎಮ್ಮಾರ್ಕೆ ಅವರ ಗಜಲ್ ಇದ್ದದ್ದು ಇದ್ದ ಹಾಗೇ ಹೇಳುವವರೇ ಕಮ್ಮಿಬುದ್ಧಿ ಮಾತುಗಳನು ಕೇಳುವವರೇ ಕಮ್ಮಿ ಬೇವು-ಬೆಲ್ಲದಂತೆಯೇ ನಮ್ಮೆಲ್ಲರ ಬಾಳಿಲ್ಲಿಸಂಕಷ್ಟಗಳೆಲ್ಲ ಸಹಿಸಿ ತಾಳುವವರೇ ಕಮ್ಮಿ ಅನುಕರಣೆಯಂತು ಸುಲಭದ ಸರಕಾಯ್ತುಅನುಸರಿಸಿಕೊಂಡಿಲ್ಲಿ ಬಾಳುವವರೇ ಕಮ್ಮಿ ಅನ್ಯರ ಬಗ್ಗೆ ಎತ್ತಾಡದಿರೇ ತಿಂದನ್ನ ಅರಗದುಈ ಹಾಳು ಹರಟೆ ಬಿಟ್ಟು ಏಳುವವರೇ ಕಮ್ಮಿ ಕುಂಬಾರ ಸೋಲಿನಲ್ಲೂ ಸುಖವ ಕಂಡಿದ್ದಾನೆದಿನ ಸಾಯುವವರಿಗಿಲ್ಲಿ ಅಳುವವರೇ ಕಮ್ಮಿ ಎಮ್ಮಾರ್ಕೆ

ಎಮ್ಮಾರ್ಕೆ ಅವರ ಗಜಲ್ Read Post »

ಕಾವ್ಯಯಾನ

ಲತಾ  ಎ ಆರ್ ಬಾಳೆಹೊನ್ನೂರುಅವರ ಕವಿತೆ-ಗೆಳೆಯ

ಕಾವ್ಯ ಸಂಗಾತಿ ಲತಾ  ಎ ಆರ್ ಬಾಳೆಹೊನ್ನೂರು ಗೆಳೆಯ ನನ್ನೆದೆಯ ಗೂಡಿನಲಿ ನೀನೇಗೆ ಬಂದೆನನ್ನ ಮನಸಿಗೆ ಕುರುಹು ನೀಡದೆಮೆಲುಧ್ವನಿಯಲಿ ಪ್ರೀತಿಯ ನುಡಿಯುತಿದೆನನಗೆ ಅದೇನೆಂದು ಅರಿವಿಲ್ಲದೆ ಹೋದ ಜನ್ಮದ ಋಣಾನುಭಂದನವೋಜೊತೆ ಸಾಗಿ ಸಂತೈಸಿದ ಹೃದಯವೋಕೈ ಹಿಡಿದು ಹಾರಾಡಿದ ಬಾನಂಗಳವೋನನ್ನೊಳಗೆ ಭರವಸೆ ತುಂಬಿದ ಒಲವೋ ಏನೆಂದು ಬರೆಯಲಿ ಬಿಳಿ ಹಾಳೆಯ ಮೇಲೆಹಾಕಲಾಗುವುದಿಲ್ಲ ಕೊರಳಿಗೆ ಮಾಲೆಹೊಸತನದ ಹರುಷ ತುಂಬಿದ ಸೆಲೆನವ ನವೀನತೆಯ ಪರಿಚಯಿಸುವ ಕಲೆ ಜೀವನ ಪಯಣದಲಿ ಇರು ಗೆಳೆಯನಾಗಿತಪ್ಪು ಒಪ್ಪುಗಳ ತಿಳಿಸುವ ಮನವಾಗಿಹರುಷ ತುಂಬುವ ಸುಮಧುರ ಪಯಣಿಗನಾಗಿನೀನಿರು ನಾ ಬರೆವ ಕವಿತೆಯಲಿ ಮೌನವಾಗಿ ಲತಾ  ಎ ಆರ್ ಬಾಳೆಹೊನ್ನೂರು

ಲತಾ  ಎ ಆರ್ ಬಾಳೆಹೊನ್ನೂರುಅವರ ಕವಿತೆ-ಗೆಳೆಯ Read Post »

ಕಾವ್ಯಯಾನ

ರಾಜೇಶ್ವರಿ ಶೀಲವಂತ ಅವರ ಎರಡು ಕವಿತೆಗಳು

ಕಾವ್ಯಸಂಗಾತಿ ರಾಜೇಶ್ವರಿ ಶೀಲವಂತ ಅವರ ಎರಡು ಕವಿತೆಗಳು ಕವಿತೆ- ಒಂದು ಅವಳು ಕವಿಯೂ ಅಲ್ಲಸಾಹಿತಿಯೂ ಅಲ್ಲನಿಸ್ವಾರ್ಥ ಮನದ ಗೆಳತಿಮನಸ್ಥಿತಿಗೆ ತಕ್ಕಂತೆಕಾವ್ಯದಲ್ಲಿ  ಸಾಹಿತ್ಯದಲ್ಲಿ ಅವನ ಗೋಚರಅವನ ಮನಸ್ಥಿತಿಗಿಲ್ಲಅವಳ  ಭಾವಗಳ ವಿಚಾರಭಾವಗಳೇಸಾರೀ ಸಾರೀ ಹೇಳಿ ಸಾಹಿತಿಗಳಿಗೆಕೂಗಿ ಕೂಗಿ ಹೇಳಿ ಕವಿಗಳಿಗೆಅವಳದು ಪುಟ್ಟ ನೊಂದಭಾವುಕ ಹೃದಯಅದಕಿಲ್ಲ ಸಾಮರ್ಥ್ಯ          ಆ ನೋವ ಭರಿಸುವತಿಳಿಸಿರವರಿಗೆ ಭಾವನೆಗಳ ಸ್ಪಂದನವಅವಳ ಮನದಾಳದ ನೋವ. ***** ಕವಿತೆ-ಎರಡು ತಾಯಿ,ಅಬ್ಬೆ, ಅವ್ವಾ, ಅಮ್ಮಹಲವಾರುನಾಮಧೇಯ ನಿನಗೆನೀನು ಮಮತೆಜವಾಬ್ದಾರಿಯ ಸಾಕಾರನೀ ಹಂಚಿದೆ ಸಮ ಪ್ರೀತಿನಿನ್ನೆಲ್ಲ  ಮಕ್ಕಳಿಗೆನಿನ್ನೊಬ್ಬಳಿಗೆ ನೀಡಲಾರರುಆ ಪ್ರಬುದ್ಧ ಮಕ್ಕಳು  ಹಿಂತಿರುಗಿ ಆ ಪ್ರೀತಿಅವರಿಗಿಲ್ಲನಿನ್ನ ಸಲಹುವ ತವಕಅವರೆಲ್ಲತಮ್ಮ ಹೆಂಡತಿ ಮಕ್ಕಳಿಗೆ ಭಾವುಕನಿನಗೆ ಮಾತ್ರವೃದ್ಧಾಶ್ರಮದ  ಆಸರೆಅವ್ವಾ ಬೇಕಿತ್ತಾನಿನಗೆ ಇದೆಲ್ಲದರ ಹೊರೆಇನ್ನಾದರೂ  ನಿನ್ನಷ್ಟಕ್ಕೆ ನೀನೆ ಇರೆ. ರಾಜೇಶ್ವರಿ ಶೀಲವಂತ

ರಾಜೇಶ್ವರಿ ಶೀಲವಂತ ಅವರ ಎರಡು ಕವಿತೆಗಳು Read Post »

ಕಾವ್ಯಯಾನ, ಗಝಲ್

ಮಾಜಾನ್‌ ಮಸ್ಕಿ ಗಜಲ್

ಕಾವ್ಯ ಸಂಗಾತಿ ಮಾಜಾನ್‌ ಮಸ್ಕಿ ಗಜಲ್ ಹೊಕ್ಕಳ ಬಳ್ಳಿ ಹೃದಯದ ಬಡಿತ ನೀನಲ್ಲವೆಜಗಮರೆಸುವ ಕಂದ ನಗುವ ಹಿತ ನೀನಲ್ಲವೆ ಪ್ರಪಂಚದಲಿ ಒಂಟಿಯಲ್ಲ ಜೊತೆ ನೀನಿರಲುಪ್ರೀತಿ ವಾತ್ಸಲ್ಯ ಬಾಂಧವ್ಯದ ತುಡಿತ ನೀನಲ್ಲವೆ ಮರುಭೂಮಿಯಲಿ ಒಯಸಿಸ್ ಸಿಕ್ಕಂತಾದೆಅಕ್ಕರೆ ಆಸರೆ  ಕಾರಂಜಿಯ ಪುಟಿತ ನೀನಲ್ಲವೆ ಪಾಲನೆಯಲಿ ಕಳೆದ ದಿನಗಳು ತಿಳಿಯಲಿಲ್ಲಇಳಿ ವಯಸ್ಸಿನ ಉತ್ಸಾಹದ ಮಿಡಿತ ನೀನಲ್ಲವೆ ತುಂಬಿದ ನವಮಾಸದಲ್ಲಿ ಬಂದ ಜೀವ ನೀನುಮಾಜಾ ಜನುಮಜನುಮದ ಸೆಳೆತ ನೀನಲ್ಲವೆ ಮಾಜಾನ್ ಮಸ್ಕಿ

ಮಾಜಾನ್‌ ಮಸ್ಕಿ ಗಜಲ್ Read Post »

ಕಾವ್ಯಯಾನ

ಅನಸೂಯ ಜಹಗೀರದಾರ ಕವಿತೆ “ಹಲವು ಬಲಿದಾನಗಳು”

ಕಾವ್ಯ ಸಂಗಾತಿ ಅನಸೂಯ ಜಹಗೀರದಾರ “ಹಲವು ಬಲಿದಾನಗಳು” ಸುಧಾರಣೆಯಾಗುತ್ತವೆ..ಹೀಗೆಅಂದುಕೊಳ್ಳುತ್ತೇವೆ. ಕೆಲವು ಆಹುತಿಯಿಂದಕೆಲವು ಬಲಿದಾನದಿಂದಹಾಗೆಯೇ ನನ್ನ ವಾತಾವರಣವೂ.. ಅರೆ..! ಏನಾಗಿಹೋಯ್ತು..ಅಂತ ಚಿಂತಿಸಬಾರದು..ಬಲಿದಾನಕ್ಕೆ ಬೆದರಬಾರದು..ಆಹುತಿಗೆ ಅಂಜಬಾರದು.. ಇಲ್ಲದಿರೆ..;ಭಗತಸಿಂಗ್ ಶಹೀದನಾಗುತ್ತಿರಲಿಲ್ಲ..ಲಕ್ಷೀಬಾಯಿ ಸಂತಾನ ಕಳೆದುಕೊಳ್ಳುತ್ತಿರಲಿಲ್ಲ..! ನಿಜ..!ದೇವರೂ ಸಹ ವರ ದಯಪಾಲಿಸಲುತಪಸ್ಸು ಬೇಡುತ್ತಾನೆಹವಿಸ್ಸಿನ ನಂತರವೇ ಕಣ್ಣು ತೆರೆಯುತ್ತಾನೆ..! ಇದಕ್ಕಲ್ಲವೆ..,ಪಾನಾ ಹೈತೋ ಕುಛ ಖೋನಾ ಹೈ..!ಹಸನಾ ಹೈ ತೋ ಕುಛ ರೋನಾ ಹೈ.. ಇಷ್ಟೇ….,ನಾವು ಬಂದದ್ದು ಏಕೆಂದುಇರುವುದು ಏಕೆಂದುತಿಳಿದರೆ ಸಾಕು… ಒಂದು,ಆಂದೋಲನಒಂದು ಕ್ರಾಂತಿ ಆಗಬೇಕಾದರೆಹಲವು ಬಲಿದಾನವೂ ಬೇಕು..!ಹಲವು ಗಂದಗಿ ತೊಲಗಲುಗಂಧ ಹೊತ್ತ ಮರುತ ಬೇಕುಹಾಗಾದರೆ ಮಾತ್ರಸುಧಾರಣೆಯ ಸುಗಂಧ ಹರಡೀತು..!! ಅನಸೂಯ ಜಹಗೀರದಾರ

ಅನಸೂಯ ಜಹಗೀರದಾರ ಕವಿತೆ “ಹಲವು ಬಲಿದಾನಗಳು” Read Post »

You cannot copy content of this page

Scroll to Top