“ಹುತಾತ್ಮರ ದಿನ” ಡಾ ತಾರಾ ಬಿ ಎನ್ ಧಾರವಾಡ
ಕಾವ್ಯ ಸಂಗಾತಿ ಡಾ ತಾರಾ ಬಿ ಎನ್ ಧಾರವಾಡ “ಹುತಾತ್ಮರ ದಿನ” ಭವ್ಯ ಭಾರತದ ವೀರ ಯೋಧರನೆನಪುಗಳ ಲಗ್ಗೆಹೃದಯಗಳಲ್ಲಿ ಹಚ್ಚಿದ ಜ್ಯೋತಿಮನಸ್ಸಿನ ಹೊನ್ನೆಳೆಯಿಂದ,ಭೂ ಮಾತೆಯ ಹೃದಯ ಕರುಣೆತನ್ನೋಡಲಿನಲ್ಲಿವೀರರ ರಕ್ತದ ಕಂಗುಳಿಯಿಂದ. ಮೂಕವಾಗಿ ರೋಧಿಸಿದ ಈ ಹದಿನಾಲ್ಕನೆಯ ದಿನ,ಸ್ಮರಣೆಯ ಸುಗಂಧವೊಂದುಪಸರಿಸಿ ಹರಡಿಹುದುಹುತಾತ್ಮರ ಹೆಜ್ಜೆಯ ನೋವುಇನ್ನೂ ನಮ್ಮೊಳಗೇ ಗುನುಗುತ್ತಿದೆ. ಪುಲ್ವಾಮದ ಕರುಣ ಕಥೆಯಲಿವೀರರ ಉಸಿರಿನ ಉರಿಯೇ ಉಳಿದು,ಭಾರತ ತಾಯಿಯ ಮಡಿಲಲ್ಲಿಅಮರ ಗಾಥೆಯಾಗಿ ಮಿಂಚಿತು.ಆ ಆತಂಕದ ನೆಲದಲಿ ಸುರಿದ ರಕ್ತ ರಾಷ್ಟ್ರಧ್ವಜದ ಕೆಂಪು ಗಟ್ಟಿಯಾಗಿ,ಅಮರ ವೀರರ ತ್ಯಾಗ ಕಥೆಭಾರತೀಯರ ಹೃದಯದಲಿಬರೆಯಲ್ಪಟ್ಟ ಕಣ್ಣೀರ ವ್ಯಥೆವೀರರ ಶೌರ್ಯಗಾಥೆಗಗನಕೆ ಏರಿದ ಗರ್ವದ ಗೀತೆ, ಜೀವ ಕೊಟ್ಟು ಜಗ ಕಾಯ್ದಸ್ವಾತಂತ್ರ್ಯದ ಪವಿತ್ರ ಪಾಠ.ವೀರಗತಿ ಭಾವನ ಪಟ್ಟಪ್ರತಿ ಗಾಳಿಯಲಿ ಉಸಿರು,ಪ್ರತಿ ಹೃದಯದ ತಾಳದಲಿ ಅವರ ಧೈರ್ಯದ ಮಿಡಿತ ಭೂದೇವಿ ಕಣ್ಣೀರಿನ ಹನಿಮುತ್ತಾಗಿ ಮಣ್ಣಿನಲಿ ಮಿನುಗಿ,ದೇಶಪ್ರೇಮದ ದೀಪ ಬೆಳಗಿಸಿಹೊಸ ಪೀಳಿಗೆಗೆ ದಾರಿ ತೋರಿತು. ಹುತಾತ್ಮರೆ! ನಿಮ್ಮ ತ್ಯಾಗದ ನೆನಪುನಮ್ಮ ಬದುಕಿನ ಬೆಳಕಾಗಲಿ,ನಿಮ್ಮ ಅಮರ ಆತ್ಮಶಕ್ತಿನಮ್ಮ ಸಂಕಲ್ಪದ ಶಕ್ತಿಯಾಗಲಿ.ಫೆಬ್ರವರಿ ಹದಿನಾಲ್ಕು ದಿನದಲಿನಮಿಸುವೆವು ನಮನಗಳ ಮಾಲೆ, ಭಾರತ ತಾಯಿಯ ವೀರಪುತ್ರರೇನಿಮ್ಮ ನೆನಪು ಶಾಶ್ವತನಿಮ್ಮ ತ್ಯಾಗ ಸೇವೆ ನಿಶ್ಚಿತನಿಮ್ಮ ಸೇವೆ ಶ್ರೀದೇವಿಗೆ ಹಿತನೀವೇ ಸದಾ ಎಲ್ಲರ ಪರಮಾಪ್ತನಿಮಗಿದೋ ಕೋಟಿ ವಂದನೆ.ಜೈ ಹಿಂದ್ ಡಾ ತಾರಾ ಬಿ ಎನ್ ಧಾರವಾಡ
“ಹುತಾತ್ಮರ ದಿನ” ಡಾ ತಾರಾ ಬಿ ಎನ್ ಧಾರವಾಡ Read Post »









