ಡಾ. ಪುಷ್ಪಾವತಿ ಶಲವದಿಮಠ ಅವರ ಕವಿತೆ “ಅರಿವಿನ ದಾರಿ ಹುಡುಕುತ”
ಕಾವ್ಯ ಸಂಗಾತಿ ಡಾ. ಪುಷ್ಪಾವತಿ ಶಲವದಿಮಠ “ಅರಿವಿನ ದಾರಿ ಹುಡುಕುತ” ಇದ್ದು ಬಿಡು ಸುಮ್ಮನೆ ಬುದ್ಧನಂತೆ ಸುಮ್ಮನಿದ್ದುಬಿಡುಹೊರಟು ಬಿಡು ಈ ಜಗದ ಜಂಜಡ ಕಳೆದುಕೊಂಡು ಬಿಡು ಹೊರಟು ಬಿಡು ನೀನುನಡೆವ ದಾರಿ ದೊಡ್ಡದಿದೆಕಲ್ಲು ಮುಳ್ಳು ಚುಚ್ಚಬಹುದುರಕ್ತ ಒಸರಬಹುದುಮುಲಾಮು ಹಚ್ಚಿಕೋಪಟ್ಟಿ ಕಟ್ಟಿಕೋನಡೆಯುವುದು ಮಾತ್ರ ಬಿಡಬೇಡಎಲ್ಲೂ ನಿಲ್ಲಬೇಡಾ ನಡೆಯುತ್ತಲೇ ಇದ್ದುಬಿಡು ನಿನ್ನ ಅಂಜಿಸುವವರುಹೀಯಾಳಿಸುವವರುಅನುಮಾನಿಸುವವರುಹಿಂದೆಳೆಯುವವರುತೆಗಳುವವರುಬೈಯುವವರುನೂರೆಂಟು ಮಂದಿ ಇರಬಹುದುಬಿಟ್ಟು ಬಿಡು ಮಂದಿಯ ಸಹವಾಸಮನದ ಮಾತು ಕೇಳು ಸಾಕು ನಿನ್ನ ಕಷ್ಟ ಕಣ್ಣಿರಿಗೂ ಕರುಗುವರಿಲ್ಲಈ ದುರ್ಬಲತೆಯ ನೀಗಲೇ ಬೇಕು ನೀನುನಿನಗೆ ನೀನು ಆಸರೆಯಾಗಬೇಕುಕಾಲ ನಿಲ್ಲುವುದಿಲ್ಲನೀನು ನಿಂತರೆ ಹೇಗೆ?!ತಳ್ಳಿಕೊಂಡೆ ಹೋಗಿಬಿಡುವುದು ಕಾಲಜೊತೆಗೆ ನಿಲ್ಲುವರಿಲ್ಲನಿಲ್ಲಬೇಡ ನೀನು ಓಡು ಓಡುಯಾರಿಗೂ ಕಾಯಬೇಡಯಾರೂ ಕಾದಿಲ್ಲ ನಿನಗಾಗಿ ಒಂಟಿ ಪಯಣವೆಂದು ಬೇಸರಸದಿರುದೂರದ ದಡ ಸೇರಲುಒಂಟಿಯಾಗಿಯೇ ನಡೆಯಬೇಕುನಿನ್ನ ಪಾಪ ಪುಣ್ಯಗಳ ಮೂಟೆ ಹೆಗಲಿಗೆರಿಸಿಕೊಂಡುನಡೆದು ಬಿಡು ಮೋಹ ಮಮಕಾರಗಳ ತೊರೆದುಬುದ್ಧ ಬಸವ ನಡೆಯಲಿಲ್ಲವೇಅವರ ದಾರಿಯೇನು ಸಲೀಸಾಗಿತ್ತೆ?! ಬೆಳಕಿನ ಅರಮನೆಗೆನೂರಾರು ದಾರಿಗಳಿವೆಯಂತೆನಡೆದು ಬಿಡು ಬೆಳಕಿನೆಡೆಗೆಸವಿ ಸಗ್ಗ ಪಡೆಯಲುಇಹದ ಕಗ್ಗ ಬಿಡಿಸಿಕೊಳ್ಳಬೇಕುಬಿಡಿಸಿಕೊಂಡು ಬಿಡುಅಲ್ಲಮ ನಡೆದ ದಾರಿಅಕ್ಕ ನಡೆದ ದಾರಿನಿನ್ನೆದುರಿಗಿದೆಆ ದಾರಿಗುಂಟ ನಡೆದು ಬಿಡುಸಿಗಬಹುದು ನಿನಗೆಅರಿವಿನ ಮನೆಬೆಳಕಿನ ಅರಮನೆ ತೊರೆದು ಬಿಡು ಸಾವಿರ ಚಿಂತೆಇದ್ದು ಬಿಡು ಬುದ್ಧನಂತೆಹೊರಟು ಬಿಡು ಹೊರಟು ಬಿಡುಬಿಟ್ಟು ಅವರಿವರ ಚಿಂತೆಅರಿವ ದಾರಿ ಹುಡುಕುತಕನಕ ಶರೀಫರು ಮೀಟಿದತಂಬೂರಿ ಮೀಟತ….. ಡಾ. ಪುಷ್ಪಾವತಿ ಶಲವದಿಮಠ
ಡಾ. ಪುಷ್ಪಾವತಿ ಶಲವದಿಮಠ ಅವರ ಕವಿತೆ “ಅರಿವಿನ ದಾರಿ ಹುಡುಕುತ” Read Post »









