ಕಾವ್ಯ ಸಂಗಾತಿ ಡಾ.ಶಿವಕುಮಾರ್ ಮಾಲಿಪಾಟೀಲ “ನಮಗ ಮಳೆ ಯಾಕ ಬೇಕು” *ಫಲವತ್ತಾದ ಭೂಮಿ ರಿಯಲ್ ಎಸ್ಟೇಟ್ ಮಾಡಿವಿ**ಹೊಲ ಗದ್ದೆ ಮುಚ್ಚಿ ಬಂಗಲೆ ,ಬಾರ್ ಕಟ್ಟಿವಿ**ಕೆರೆ,ಬಾವಿ ಮುಚ್ಚಿ ಮೆಟ್ರೋಮಾಲ್ ಕಟ್ಟಿವಿ**ಇನ್ವೆಸ್ಟ್ ಕರ್ನಾಟಕ ಹೆಸರಲ್ಲಿ ಬಂಡವಾಳ ಶಾಹಿಗಳಿಗೆ ಸಾವಿರಾರು ಎಕರೆ ಭೂಮಿ ಕೊಟ್ಟಿವಿ ಹಿಂಗಿದ್ದಾಗ**ನಮಗ ಮಳೆ ಯಾಕೆ ಬೇಕು?* *ವಿಂಡ್ ಪ್ಯಾನ್ , ಸೋಲಾರ್*,*ರಿಯಲ್ ಎಸ್ಟೇಟ್ , ರೇಸಾಲ್ಟ್ ಫ್ಯಾಕ್ಟರಿಗಳ ಹೆಸರಲಿ ಹೊಲ ಬರಡು ಮಾಡಿವಿ**ಅಭಿವೃದ್ಧಿ ಹೆಸರಲ್ಲಿ ಸಿಕ್ಕ ಸಿಕ್ಕಂಗ ಗಿಡ ಮರಗಳ ಕಡದಿವಿ**ಹಿಂಗಿದ್ದಾಗ ನಮಗ ಮಳೆ ಯಾಕೆ ಬೇಕು?* *ಹಳ್ಳಿ ಯಾರಿಗೆ ಬೇಕಾಗೈತಿ?**ಊರು ಗೌಡನಿಗೆ ನಗರದಲ್ಲಿ ಸೆಕ್ಯೂರಿಟಿ ಗಾರ್ಡ ನೌಕರಿ ಸಿಕ್ಕೈತಿ**ನಾಯಕರು ನೀರಾವರಿ ಇಲಾಖೆ ಬೇಡ , ನಗರಾಭಿವೃದ್ಧಿ ಇಲಾಖೆ ಬೇಕು ಅಂತಾರ ಹಿಂಗಿದ್ದಾಗ ನಮಗ ಮಳೆ ಯಾಕ ಬೇಕು?* *ದನ ಕರು , ಹೈನದ ಚಿಂತಿಯಾಕ*,*ಹಾಲು ಮೊಸರು ತುಪ್ಪ ಪ್ಯಾಕೇಜ್ ನಲ್ಲಿ ಸಿಗತೈತೆ**ಹಬ್ಬದಾಗ ಸೆಗಣಿ ಬೇಕೆಂದರೆ online ನಲ್ಲಿ ಸಿಗತೈತೆ**ಒಕ್ಕಲುತನ ಎಲ್ಲರಿಗೂ ಬ್ಯಾಡ ಆಗೈತೆ ಹಿಂಗಿದ್ದಾಗ ನಮಗ ಮಳೆ ಯಾಕೆ ಬೇಕು?* *ಯೋಚಿಸುವುದಕ್ಕೆ AI ,ChatGPT ಐತೆ**ಕೆಲಸ ಮಾಡಾಕ Robots ಅದಾವು**ಬದುಕಲು ಸರಕಾರ ಉಚಿತ ಭಾಗ್ಯಗಳ ಕೊಟ್ಟೈತೆ*,*ಮಹಿಳೆಯರು ತಿರಿಗ್ಯಾಡಲು ಬಸ್ ಫ್ರೀ ಬಿಟ್ಟೈತೆ**ಅಡಿಗೆ ಮಾಡೋದೆ ಬೇಕಿಲ್ಲ , Zomato ,Swiggy ಹೊಟ್ಟೆ ತುಂಬಿಸಿ ಬಿಡತಾವು**ಹಿಂಗಿದ್ದಾಗ ನಮಗ ಮಳೆ ಯಾಕ ಬೇಕು?* *ಕುಡಿಯಾಕ ನೀರು ಬೇಕೆಂದರೆ**ಖಗ್ರಾಸ ಹಳ್ಯಾಗು ಬಾಟಲ್ ನೀರು ಸಿಗತೈತೆ**ನೀರ ಸಿಗದಿದ್ದರೂ ಬೀರಂತು ಸಿಕ್ಕ ಸಿಗತೈತೆ**ಸರಕಾರ ಮುಜರಾಯಿ , ಸರಾಯಿ ಹಣ ಮೇಲೆ ನೆಡಿತೈತೆ ಅಂದರೆ ನಮಗ ಮಳೆ ಯಾಕ ಬೇಕು?* *ರೊಕ್ಕ ಬೇಕೆಂದರೆ ಪೊನ್ ಪೇ , ಗೂಗಲ್ ಪೇ ಐತೆ**ಟೈಮ್ ಪಾಸ್ ಮಾಡಾಕ* *WhatsApp ,FB , Instagram ಐತೆ ,reels ಮಾಡಿ ಬಿಡಾಕ social media ಐತೆ* *ಜನರು ಜಗಳಾಡಾಕ ಜಾತಿ ಧರ್ಮ ಅದಾವು**ಹಸಿರು , ಕೆಸರಿನಲ್ಲಿ ನಾಯಕರಿಗೆ ಅಧಿಕಾರ ಸಿಗತೈತೆ**ಬರಗಾಲ ಬಂದರೂ ಅನುದಾನ ಸಿಗತೈತೆ ಹಿಂಗಿದ್ದಾಗ ನಮಗ ಮಳೆ ಯಾಕ ಬೇಕು?* ಡಾ.ಶಿವಕುಮಾರ್ ಮಾಲಿಪಾಟೀಲ