ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಅನುವಾದಿತ ಅಬಾಬಿಗಳು

ಅನುವಾದ ಸಂಗಾತಿ ಅನುವಾದಿತ ಅಬಾಬಿಗಳು ಆಕರ : ಕಾಲಂ ಸಾಕ್ಷಿಗಾ(ತೆಲುಗು ಅಬಾಬಿಗಳ ಸಂಕಲನ) ಮೂಲ ಲೇಖಕರು : ಷೇಕ್ ಅಬ್ದುಲ್ ಹಕೀಮ್ಕನ್ನಡಾನುವಾದ : ಧನಪಾಲ ನಾಗರಾಜಪ್ಪ ೧೩)ಮನುಷ್ಯ ಮನುಷ್ಯನನ್ನೇ ದ್ವೇಷಿಸುವಂತೆಭೇದಭಾವಗಳನ್ನು ಸೃಷ್ಟಿಸುತ್ತಅಮಾಯಕ ಜನರನ್ನು ಹಿಂಸಿಸುತ್ತಹಕೀಮಾಮೇಕೆಬಣ್ಣದ ಹುಲಿಗಳಾಗಿ ಹೊಂಚುಹಾಕಿದರಲ್ಲಾ! ೧೪)ವೇಷಧಾರಣೆಗಳೇ ಗುರುತುಗಳಾದವೆಮನುಷ್ಯ ಮನುಷ್ಯತ್ವ ಏನಾಯಿತು?ಪಶುವಿಗಾಗಿ ಪರದಾಡುತ್ತಿವೆಯಾ?ಹಕೀಮಾದೇಶದಲ್ಲಿ ಪಶುಗಳು ರಾಜ್ಯವೆ? ೧೫)ದೇಶದಲ್ಲಿ ಕಳ್ಳರು ಹೆಚ್ಚಾಗಿದ್ದಾರೆದೇಗುಲಗಳಲ್ಲಿನ ದೇವರುಗಳೇ ಇವರ ಗುರಿಅಧಿಕಾರಿದಲ್ಲಿ ಹೂ ಇದ್ದರೆ ಇಷ್ಟೇನಾ?ಹಕೀಮಾ

ಅನುವಾದಿತ ಅಬಾಬಿಗಳು Read Post »

ಕಾವ್ಯಯಾನ

ಬಚ್ಚಿಟ್ಟಿರುವೆ

ಕಾವ್ಯ ಸಂಗಾತಿ ಬಚ್ಚಿಟ್ಟಿರುವೆ ಲಕ್ಷ್ಮಿ ಕೆ ಬಿ ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ ಮಳೆ ಚಳಿಗೆನಡುಗದಂತೆಉರಿಬಿಸಿಲಿಗೆ ಒಣಗದಂತೆ ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ ಸದಾ ನಗುವಕಾಮನಬಿಲ್ಲಿನ ಬಣ್ಣಮಾಸದಂತೆ ಹೊಳೆವ ನಿನ್ನಕಂಗಳ ಚೆಲುವುಮರೆಯಾಗದಂತೆ ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ ಜಗದ ಬಂಧಮುಗಿಸೋ ಗಳಿಗೆಯಲ್ಲೂಜೊತೆ ನಡೆವಂತೆ ಅಣಿಮಾಡಲು ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ….ಒಲವಿಂದ….

ಬಚ್ಚಿಟ್ಟಿರುವೆ Read Post »

ಕಾವ್ಯಯಾನ

ಉತ್ತರ ಹೇಳು ಸಖ

ಕಾವ್ಯ ಸಂಗಾತಿ ಉತ್ತರ ಹೇಳು ಸಖ ಶಂಕರಾನಂದ ಹೆಬ್ಬಾಳ ನಿಬಿಡಾರಣ್ಯದಲಿಒಬ್ಬಂಟಿ ನಾನುಬೋಳು ಮರದಂತೆ,ನಿಶ್ಚಲ ಭಾವವಿಷಣ್ಣತೆಯಲಿಗೊಣಗುತಿರುವೆ… ಜಾರಿದ ಸಮಯಕ್ಕೂಗೊತ್ತಾಗಲಿಲ್ಲವೆ..?ಉಳಿದ ನೆನಪುಗಳುತೊಗಲು ಬೊಂಬೆಯಂತೆಥೈತಕ ಕುಣಿಯುತ್ತಿವೆ…. ಬೇಗೆಯಲಿ ದಿಗ್ಗನೆದ್ದುಬಂದಂತೆ ಭಾಸವಷ್ಟೆನಿಂತ ಜಾಗ ಕುಸಿದಂತೆಕೊಂಚ ಅಳುಕುಎದ್ದು ಕುಳಿತೆಬುದ್ದನಂತೆಶಾಂತಿಯಿಲ್ಲದೆ… ಈಗ ಹೊರಟಿದ್ದೇನೆಧ್ರುವಕೆ ವಿಮುಖನಾಗಿ“ದಾರಿಯಾವುದಯ್ಯಾವೈಕುಂಠಕೆ ಎಂದು”ದಾಸ ಮಾರ್ಗವನುಹಿಡಿದು,ಸತ್ಯವನರಸಿಮೋಕ್ಷಾಪೇಕ್ಷಿಯಾಗಿಅಲೆವ ಯೋಗಿನಂತೆನಡೆದಿದ್ದೇನೆ ದಿನದಿನಗಳ ಸವೆಸಿಸವೆದ ಚಪ್ಪಲಿಯಾಗಿದ್ದೇನೆ…. ದುಗುಡವಾವರಿಸಿದುಃಖದೊಳು ತೇಲಿಪರಿಹಾರವಿಲ್ಲದಫಲಾನುಭವಿ ನಾನುಉತ್ತರವೆಲ್ಲಿದ ಸಖನನ್ನ ಮನದ ಪ್ರಶ್ನೆಗೆ….?

ಉತ್ತರ ಹೇಳು ಸಖ Read Post »

ಕಾವ್ಯಯಾನ

ಲೇಖನಿ

ಕಾವ್ಯ ಸಂಗಾತಿ ಲೇಖನಿ ಅನಿತಾ ಸಿಕ್ಕಿತೊಂದು ಜಾದೂ ಲೇಖನಿಹಣೆಬರಹ ಅಳಿಸಿ, ಮತ್ತೊಮ್ಮೆ ಬರೆಯಬಹುದಿತ್ತು, ಆ ವಿಧಾತನ ದನಿ ಅಳುಬರಹ ಒರೆಸಿನೋವು, ನಲಿವಾಗಿಸಿ ಬದುಕುಬದಲಾಯಿಸಬೇಕೆಂದಿತುಆಕಾಂಕ್ಷೆಯ ತಾಸು! ಸಿರಿವಂತಿಕೆ, ಬಡತನದ್ವೇಷ, ಪ್ರೀತಿ, ಮೇಲು ಕೀಳುಕಣ್ಮುಂದೆ ಹಾದುಹೋಗುತ್ತಿತ್ತುಅಂತರಾಳದ ಕನಸು! ರವಿವರ್ಮನ ಕುಂಚದ ಬಣ್ಣತುಂಬಿ, ನವಿರಾದ ಎಳೆಗಳಿಗೆರಂಗುರಂಗಿನ ಹೊಸತನಮೂಡಿಸುವ ಹುಮ್ಮಸ್ಸು! ಅವೇನು ಕಠಿಣ ಕಾರ್ಯವಾಗಲಿಲ್ಲಜೀವ, ಜೀವಂತಿಕೆಯ ಒಳಗೆಮಾರ್ಪಾಟಾಗಿತ್ತು ಹಲವು ಮಜಲು! …. ಆಯಸ್ಸು ಮೆಟ್ಟಿಲೊಳಗೆ ಇಳಿಯಲಾಗದೆಸಾವಿನ ಕ್ಷಣ ಮುಂದೂಡಲಾಗದೆ…

ಲೇಖನಿ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ನಯನ. ಜಿ. ಎಸ್ ನಗುತಿಹ ಕಂಗಳ ಹಿಂದಿಹುದು ಕಡು ನೋವುಗಳು ಬಲ್ಲವರು ಯಾರುಅರಳು ತುಟಿಗಳೊಡಲಿನ ನೊಂದ ಮಾತುಗಳ ಆಲಿಸುವವರು ಯಾರು ! ನಕ್ಕಾಗ ನಗುತ , ನೊಂದಾಗ ಮೌನದಿ ಅತ್ತು ದಣಿಯುತ್ತಿದೆ ಮನಸ್ಸುಮನವ ಹಿಂಡುತಿದೆ ವ್ಯಂಗ್ಯಗಳ ಹಿಂಸೆ ಇದ ಅಳೆಯುವವರು ಯಾರು ! ನಿಶೆಯ ನಶೆಗೂ ಮರೀಚಿಕೆ ಆದಂತಿದೆ ಸುಖ ಸ್ವಪ್ನಗಳ ಸಿಹಿಯಾದ ನಶೆನೀರವ ಕ್ಷಣಗಳನೂ ಭೀತಿಗೊಳಿಸುತಿದೆ ಅಳಲು ಅರಿಯುವವರು ಯಾರು ! ಆಶೆಗಳ ಕನಸು ಹುಸಿಯಾಗುತಿದೆ ಕಪಟಿಗರ ಕ್ರೌರ್ಯದಿ ನಲುಗಿ ಕೊರಗಿಮನದ ತುಮುಲಗಳು ತಾರಕಕ್ಕೇರಿದೆ ಅರಿತು ಸಂತೈಸುವವರು ಯಾರು ! ಬಾಳ್ವೆಯು ಕಂಡಂತಿಲ್ಲ , ಬುಡಮೇಲಾದೀತು ಕನಸುಗಳು ಎಚ್ಚರ ‘ನಯನ’ಬಣ್ಣ ಬಣ್ಣದ ಬೂಟಾಟಿಕೆಯ ಜನರಿಹರು ಜೊತೆ ಬರುವವರು ಯಾರು !

ಗಜಲ್ Read Post »

You cannot copy content of this page

Scroll to Top