ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಉತ್ತರ ಹೇಳು ಸಖ

ಕಾವ್ಯ ಸಂಗಾತಿ ಉತ್ತರ ಹೇಳು ಸಖ ಶಂಕರಾನಂದ ಹೆಬ್ಬಾಳ ನಿಬಿಡಾರಣ್ಯದಲಿಒಬ್ಬಂಟಿ ನಾನುಬೋಳು ಮರದಂತೆ,ನಿಶ್ಚಲ ಭಾವವಿಷಣ್ಣತೆಯಲಿಗೊಣಗುತಿರುವೆ… ಜಾರಿದ ಸಮಯಕ್ಕೂಗೊತ್ತಾಗಲಿಲ್ಲವೆ..?ಉಳಿದ ನೆನಪುಗಳುತೊಗಲು ಬೊಂಬೆಯಂತೆಥೈತಕ ಕುಣಿಯುತ್ತಿವೆ…. ಬೇಗೆಯಲಿ ದಿಗ್ಗನೆದ್ದುಬಂದಂತೆ ಭಾಸವಷ್ಟೆನಿಂತ ಜಾಗ ಕುಸಿದಂತೆಕೊಂಚ ಅಳುಕುಎದ್ದು ಕುಳಿತೆಬುದ್ದನಂತೆಶಾಂತಿಯಿಲ್ಲದೆ… ಈಗ ಹೊರಟಿದ್ದೇನೆಧ್ರುವಕೆ ವಿಮುಖನಾಗಿ“ದಾರಿಯಾವುದಯ್ಯಾವೈಕುಂಠಕೆ ಎಂದು”ದಾಸ ಮಾರ್ಗವನುಹಿಡಿದು,ಸತ್ಯವನರಸಿಮೋಕ್ಷಾಪೇಕ್ಷಿಯಾಗಿಅಲೆವ ಯೋಗಿನಂತೆನಡೆದಿದ್ದೇನೆ ದಿನದಿನಗಳ ಸವೆಸಿಸವೆದ ಚಪ್ಪಲಿಯಾಗಿದ್ದೇನೆ…. ದುಗುಡವಾವರಿಸಿದುಃಖದೊಳು ತೇಲಿಪರಿಹಾರವಿಲ್ಲದಫಲಾನುಭವಿ ನಾನುಉತ್ತರವೆಲ್ಲಿದ ಸಖನನ್ನ ಮನದ ಪ್ರಶ್ನೆಗೆ….?

ಉತ್ತರ ಹೇಳು ಸಖ Read Post »

ಕಾವ್ಯಯಾನ

ಲೇಖನಿ

ಕಾವ್ಯ ಸಂಗಾತಿ ಲೇಖನಿ ಅನಿತಾ ಸಿಕ್ಕಿತೊಂದು ಜಾದೂ ಲೇಖನಿಹಣೆಬರಹ ಅಳಿಸಿ, ಮತ್ತೊಮ್ಮೆ ಬರೆಯಬಹುದಿತ್ತು, ಆ ವಿಧಾತನ ದನಿ ಅಳುಬರಹ ಒರೆಸಿನೋವು, ನಲಿವಾಗಿಸಿ ಬದುಕುಬದಲಾಯಿಸಬೇಕೆಂದಿತುಆಕಾಂಕ್ಷೆಯ ತಾಸು! ಸಿರಿವಂತಿಕೆ, ಬಡತನದ್ವೇಷ, ಪ್ರೀತಿ, ಮೇಲು ಕೀಳುಕಣ್ಮುಂದೆ ಹಾದುಹೋಗುತ್ತಿತ್ತುಅಂತರಾಳದ ಕನಸು! ರವಿವರ್ಮನ ಕುಂಚದ ಬಣ್ಣತುಂಬಿ, ನವಿರಾದ ಎಳೆಗಳಿಗೆರಂಗುರಂಗಿನ ಹೊಸತನಮೂಡಿಸುವ ಹುಮ್ಮಸ್ಸು! ಅವೇನು ಕಠಿಣ ಕಾರ್ಯವಾಗಲಿಲ್ಲಜೀವ, ಜೀವಂತಿಕೆಯ ಒಳಗೆಮಾರ್ಪಾಟಾಗಿತ್ತು ಹಲವು ಮಜಲು! …. ಆಯಸ್ಸು ಮೆಟ್ಟಿಲೊಳಗೆ ಇಳಿಯಲಾಗದೆಸಾವಿನ ಕ್ಷಣ ಮುಂದೂಡಲಾಗದೆ…

ಲೇಖನಿ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ನಯನ. ಜಿ. ಎಸ್ ನಗುತಿಹ ಕಂಗಳ ಹಿಂದಿಹುದು ಕಡು ನೋವುಗಳು ಬಲ್ಲವರು ಯಾರುಅರಳು ತುಟಿಗಳೊಡಲಿನ ನೊಂದ ಮಾತುಗಳ ಆಲಿಸುವವರು ಯಾರು ! ನಕ್ಕಾಗ ನಗುತ , ನೊಂದಾಗ ಮೌನದಿ ಅತ್ತು ದಣಿಯುತ್ತಿದೆ ಮನಸ್ಸುಮನವ ಹಿಂಡುತಿದೆ ವ್ಯಂಗ್ಯಗಳ ಹಿಂಸೆ ಇದ ಅಳೆಯುವವರು ಯಾರು ! ನಿಶೆಯ ನಶೆಗೂ ಮರೀಚಿಕೆ ಆದಂತಿದೆ ಸುಖ ಸ್ವಪ್ನಗಳ ಸಿಹಿಯಾದ ನಶೆನೀರವ ಕ್ಷಣಗಳನೂ ಭೀತಿಗೊಳಿಸುತಿದೆ ಅಳಲು ಅರಿಯುವವರು ಯಾರು ! ಆಶೆಗಳ ಕನಸು ಹುಸಿಯಾಗುತಿದೆ ಕಪಟಿಗರ ಕ್ರೌರ್ಯದಿ ನಲುಗಿ ಕೊರಗಿಮನದ ತುಮುಲಗಳು ತಾರಕಕ್ಕೇರಿದೆ ಅರಿತು ಸಂತೈಸುವವರು ಯಾರು ! ಬಾಳ್ವೆಯು ಕಂಡಂತಿಲ್ಲ , ಬುಡಮೇಲಾದೀತು ಕನಸುಗಳು ಎಚ್ಚರ ‘ನಯನ’ಬಣ್ಣ ಬಣ್ಣದ ಬೂಟಾಟಿಕೆಯ ಜನರಿಹರು ಜೊತೆ ಬರುವವರು ಯಾರು !

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್ ಜುಗಲ್ ಬಂದಿ

ಗಜಲ್ ಜುಗಲ್ ಬಂದಿ ಇರುಳು ಮಲ್ಲೆ ಮಾಲೆ ಹಿಡಿದು ಅಮಲೇರಿಸಲು ಇದಾರು ಬಂದರುತುಂಟ ಕಣ್ಣಲಿ ಮಿಂಚಿನ ಕನಸು ತೋರಿಸಲು ಇದಾರು ಬಂದರು ವಾರದ ಪೇಟೆಯಲ್ಲಿ ಅಲೆಯುತಿರುವೆ ಕಳೆದ ಹೃದಯ ಹುಡುಕುತಾಸಂತೆಯಾ ಗದ್ದಲದಲಿ ಸಂಪಿಗೆ ಮುಡಿಸಲು ಇದಾರು ಬಂದರು ಹೃದಯ ವೀಣೆಯ ಮೀಟಿ ದೂರಾದ ವೈಣಿಕನಿಗೆ ಹಂಬಲಿಸಿದೆಮುರಿದ ಎದೆ ತಂಬೂರಿಗೆ ಶ್ರುತಿ ಸೇರಿಸಲು ಇದಾರು ಬಂದರು ನೆನಪಿನ ಮೊಗ್ಗುಗಳು ಬಿರಿದು ಏನೋ ಹೇಳಿ ಜಗವ ಮರೆಸಿದವುಮೆಲು ಹೆಜ್ಜೆ ಇಡುತ ನಯನ ಮುಚ್ಚಿ ಕಾಡಿಸಲು ಇದಾರು ಬಂದರು ಬದುಕ ಬಂಡಿ ಪಯಣ ರಣ ಬಿಸಿಲಿಗೆ ಬಾಯಾರಿ ದಣಿಯಿತು ಜೀವಬಳಲಿದ ಮೈ ಮನಕೆ ಅಧರ ಜೇನು ಕುಡಿಸಲು ಇದಾರು ಬಂದರು ಕ್ರೂರ ಕಾಲಚಕ್ರ ಸುಳಿಗೆ ಸಿಲುಕಿ ಬಾಳ ನೌಕೆ ಹೊಯ್ದಾಡಿತುಅನುರಾಗದ ಬದುಕಿನ ಒಳ ಗುಟ್ಟನು ತಿಳಿಸಲು ಇದಾರು ಬಂದರು ಶಶಿ ಇಲ್ಲದ ಏಕಾಂತದ ನಿಶೆ ಧಗೆಯಲಿ ಜೀವನವು ಸವೆಯಿತು“ಪ್ರಭೆ” ಯ ತುಟಿ ಅಂಚಿನಲಿ ನಗೆ ಹೂ ಅರಳಿಸಲು ಇದಾರು ಬಂದರು ************** ಪ್ರಭಾವತಿ ಎಸ್ ದೇಸಾಯಿ ಕಂಗಳಲಿ ಪ್ರೀತಿಯ ಬಟ್ಟಲಿದೆ ಕುಡಿಸಲು ಇದಾರು ಬಂದರುಬಾಹುಗಳಲಿ ಪ್ರೀತಿಯ ಜೋಗುಳ ಹಾಡಲು ಇದಾರು ಬಂದರು ಹುಡುಕಲೇನಿದೆ ಈ ಹೃದಯ ನಿನ್ನ ಎದೆಯಲ್ಲಿ ಮಿಲನವಾಗಿದೆಏಕಾಂತದಿ ಅಧರಕ್ಕೆ ಅಧರ ಸೇರಿಸಲು ಇದಾರು ಬಂದರು ದೂರಾಗುವ ಮಾತು ಕನಸಲ್ಲೂ ಕನವರಿಸದಿರು ಮುದ್ದು ಮರಿಆಲಿಂಗನದ ಬಿಸಿ ಅಂಟನ್ನು ಲೇಪಿಸಲು ಇದಾರು ಬಂದರು ಮರೆತವನಿಗೆ ನೆನಪುಗಳು ಊರುಗೋಲು ಆಗಬಲ್ಲವು ಗೆಳತಿಹೆಜ್ಜೆ ಮೇಲೆಜ್ಜೆಯಿಟು ಸಪ್ತಪದಿ ತುಳಿಯಲು ಇದಾರು ಬಂದರು ನಿನ್ನ ಸಾಂಗತ್ಯದಿ ದಣಿವೆನ್ನುವ ಭಾವ ಚಿರ ನಿದ್ರೆಯಲ್ಲಿದೆಮೈ ಸೋಕದೆ ಮನದಿ ಪ್ರೇಮರಸ ಬೆರೆಸಲು ಇದಾರು ಬಂದರು ಒಲವಿನ ದಡ ಸೇರದೆಯೆ ಸಂಸಾರ ನೌಕೆ ಮುಳಗದು ಬೇಗಂಸುಮೆಯ ಕಂಪನು ನನ್ನಯ ಬದುಕಲಿ ಹರಡಲು ಇದಾರು ಬಂದರು ಬನದ ತುಂಬೆಲ್ಲ ಅನುರಾಗದ ಮಣ್ಣಿದೆ ಮಲ್ಲಿಗೆಯ ಸಸಿ ನೆಡು‘ಮಲ್ಲಿ’ಯ ಬಾಳಿನ ಉಯ್ಯಾಲೆಯನು ತೂಗಲು ಇದಾರು ಬಂದರು ****** ರತ್ನರಾಯ ಮಲ್ಲ

ಗಜಲ್ ಜುಗಲ್ ಬಂದಿ Read Post »

You cannot copy content of this page

Scroll to Top