ಬಾಪು ಮತ್ತು ವೈರುಧ್ಯ
ಎಷ್ಟೇ ವೈರುಧ್ಯಗಳಿದ್ದರೂ
ಅವನ್ನೆಲ್ಲ ದಾಟಿ ಮಹಾಮಾನವನಾಗಿಬಿಟ್ಟರು
ಕೆಸರನಲ್ಲಿದ್ದರು ಕೆಸರಿನಂತಾಗದೆ
ಕಮಲದಂತೆ ಅರಳಿ ಬಿಟ್ಟರು ನಮ್ಮ ಬಾಪು
ಬಾಪು ಮತ್ತು ವೈರುಧ್ಯ Read Post »
ಎಷ್ಟೇ ವೈರುಧ್ಯಗಳಿದ್ದರೂ
ಅವನ್ನೆಲ್ಲ ದಾಟಿ ಮಹಾಮಾನವನಾಗಿಬಿಟ್ಟರು
ಕೆಸರನಲ್ಲಿದ್ದರು ಕೆಸರಿನಂತಾಗದೆ
ಕಮಲದಂತೆ ಅರಳಿ ಬಿಟ್ಟರು ನಮ್ಮ ಬಾಪು
ಬಾಪು ಮತ್ತು ವೈರುಧ್ಯ Read Post »
ಇತ್ತೀಚೆಗೆ ಛತ್ತೀಸಘಡದ ಬುಡಕಟ್ಟಿನ ಜಶ್ಪುರ್ ಎಂಬಲ್ಲಿ ಸರಕಾರ ನಡೆಸುವ ಕಿವುಡು-ಮೂಕ ವಸತಿಯಲ್ಲಿ ಜರುಗಿದ ಘೋರ ಘಟನೆಯ ನೋವಿಂದ ಈ ಪದ್ಯ.
ಆ ರಕ್ಕಸ ರಾತ್ರಿಗಳು. Read Post »
ಗಜಲ್ ಅರುಣಾ ನರೇಂದ್ರ ನಿನ್ನ ಕಿರು ನಗೆ ನನ್ನೊಂದಿಗೆ ಮುನಿಸಿಕೊಂಡಾಗ ನಾ ಯಾರಿಗೆ ಹೇಳಲಿತೋಳ ತಲೆದಿಂಬು ಸರಿಸಿ ಹೊರಳಿ ಮಲಗಿಕೊಂಡಾಗ ನಾ ಯಾರಿಗೆ ಹೇಳಲಿ ಮುತ್ತಿನಲಿ ಸಿಂಗರಿಸಿ ಮುಖ ನೋಡಿ ಹಿಗ್ಗುತ್ತಿದ್ದವನು ನೀನುಪ್ರೀತಿಯ ಕರೆ ಧ್ವನಿ ಕಳೆದುಕೊಂಡಾಗ ನಾ ಯಾರಿಗೆ ಹೇಳಲಿ ಹೂವಾಗುವ ಮೊಗ್ಗಿನ ನಿದ್ರೆಯಲಿ ಬರಿ ಚಿಟ್ಟೆಯದೇ ಕನಸುಸತ್ಯ ಮುಸುಕು ಹಾಕಿಕೊಂಡಾಗ ನಾ ಯಾರಿಗೆ ಹೇಳಲಿ ನದಿಯಾಗಿ ನಿನ್ನೆದೆಯೊಳಗೆ ಹರಿದ ಧನ್ಯತೆ ಇದೆ ಸಾಜನ್ಬೆಳಕನೆ ಕುಡಿದು ಮತ್ತೇರಿಸಿಕೊಂಡಾಗ ನಾ ಯಾರಿಗೆ ಹೇಳಲಿ ಮತ್ತೆ ಮತ್ತೆ ಸೋಲುತ್ತಾಳೆ ಅರುಣಾ ಸಹನೆ ಪರಕಿಸುವ ನಿನ್ನ ಸಾಹಸಕ್ಕೆಒಲವು ಮಿಡಿವ ಹೃದಯದಿ ಸೂತಕ ಆವರಿಸಿಕೊಂಡಾಗ ಯಾರಿಗೆ ಹೇಳಲಿ
ಕಥನಕಾವ್ಯ ಆಮೆಯೂ ಮೊಲವೂ ಬೆಂಶ್ರೀ ರವೀಂದ್ರ ಭಾಗ ಒಂದು ಸ್ಪರ್ಧೆಗೆ ಆಮೆಯೂ ಮೊಲವುಟ್ರ್ಯಾಕಿನ ಗೆರೆಯಲಿ ನಿಂತಿಹವುಓಟದ ರೇಸಿಗೆ ಅಣಿಯಾಗಿಹವು ಇದೆಂತಹ ಆಟ ತಮಾಷೆ ಜೂಟಾಟಮಜವಿದೆ ನೋಟ ಆಮೆ ಮೊಲದೋಟಕಾಡಿನ ಪ್ರಾಣಿಗಳಿಗೆ ಮೋಜಿನ ಮಾಟ ಕಿವಿಯನು ನಿಗುರಿಸಿ ಕಣ್ಣನು ಪಿಳುಕಿಸಿಸಮ ಎನಗಾರೆಂದು ಬೀಗಿಹ ಭೂಪಬೆಳ್ಳನೆ ಬೆಳುಪಿನ ಮೊಲ ಮಹರಾಯ ಕಾಲನು ಜಾಡಿಸಿ ಕತ್ತನು ಆಡಿಸಿಸುತ್ತಲೂ ನೋಡಿ ದೇವಗೆ ಪ್ರಾರ್ಥಿಸಿಓಟಕೆ ಸಿದ್ದವಾದನು ಆಮೆರಾಯ ಕತ್ತನು ಕೊಂಕಿಸಿ ಕಾಲನು ಜಾಡಿಸಿಕಣ್ಣನು ಕೀಲಿಸಿ ಟ್ರ್ಯಾಕನು ವೀಕ್ಷಿಸಿಅಂಪೈರ್ ಸೀಟಿಯು ಜಿರಾಫೆರಾಯ ಮಿಂಚಿನ ವೇಗದಿ ಓಡಿತು ಮೊಲವುತೆವಳುತ ಸಾಗಿತು ಗುರಿಯೆಡೆ ಆಮೆಹೋ..ಎಂದಿತು ಪ್ರಾಣಿಯು ಗಿಡಮರ ಅರ್ಧದಾರಿ ಓಡಿದ ಮೋಲವುಕಂಡಿತು ತುಂಬಿದ ಹಸಿರು ಕಾವಲುಹಿಂತಿರುಗಿ ನೋಡಲು ಪೋಟಿದಾರ ಹಿಂದೆಲ್ಲೊ ಇಹನು ಈ ಆಮೆಭೂಪಬರುವ ತನಕ ಇಲ್ಲಿಗೆ ವಿಶ್ರಾಂತಿ ಪಡೆವೆಹುಲ್ಲೂ ನೀರು ಉಂಡು ಮಲಗಿದನು ಮೊಲಕೆ ಬಂದಿತು ಗಡದ್ದು ನಿದ್ದೆಕೇಳಿಸಿತೆಲ್ಲಡೆ ಗೊರಕೆಯ ಸದ್ದೆನಡೆಯಿತು ಆಮೆ ಗುರಿಯೆಡೆಗೆ ನಿದ್ದೆಲಿ ಮೊಲಕೆ ಗೆಲುವಿನ ಪದಕಖುಷಿಯಲಿ ಮಾಡಿ ಮತ್ತಷ್ಟು ನಿದ್ದೆಅಷ್ಟರಲಿ ಹೋ…ಎನ್ನುವ ಸದ್ದು “ಗುರಿ ಮುಟ್ಟುವ ತನಕ ನಿಲ್ಲದಿರಿ”ಮಾತನು ಮನಸಲಿ ಇಟ್ಟಿದ ಆಮೆಸದ್ದಿಲ್ಲದೆ ಗೆಲುವಿನ ಕಂಬವ ದಾಟಿತ್ತು ಕಾಡು ಪ್ರಾಣಿಗೀಣಿ ಹಕ್ಕಿಪಿಕ್ಕಿ ಕೂಡಿದವುಗೆಲುವಿನ ನಿಲುವಲಿ ಆಮೆಯ ನಿಲಿಸಿಕತ್ತಿಗೆ ಪದಕವ ತೊಡಿಸಿದವು ಸೋಮಾರಿಯಾಗದಿರಿ ಮಕ್ಕಳೆಗೆಲುವಿನ ಗುರಿಯು ಮನದೊಳಗಿರಲಿಶ್ರಮಕೆ ಫಲಸಿಗುವುದು ಶತಸಿದ್ದ. ಭಾಗ ಎರಡು ನೆನಪಿದೆಯೇ ಮಕ್ಕಳೆ ನಿಮಗೆಮೊಲದಾಮೆಯ ಓಟದ ಆಟಕಾಡಿನಲಂತೂ ನಡೆದಿದೆ ಈಗಅದೇ ಮಾತಿನ ಮೋಜಾಟ ಓಟದ ವೀರ ಸೋತಿದ್ದೆಂತುತೆವಳುವ ಆಮೆ ಗೆದ್ದಿದ್ದೆಂತುಬುಡಮೇಲಾಗಿ ಲೆಕ್ಕಾಚಾರಹೀಗೂ ಉಂಟೆ ಅಚ್ಚರಿ ಹೂಟ ಹುಲ್ಲಿನ ಬಣಿವೆಲಿ ಚಿಗುರನು ಕಚ್ಚುತಚಿಂತಿಸಿ ಮೊಲವು ಕಿವಿಯನು ನಿಗುರಿಸಿಅರಿಯಿತು ಸೋಲಿನ ಗುಟ್ಟನು ಬಿಡಿಸಿಹ್ಞಾ…ನಾ..ಸೋಮಾರಿ ದುರಹಂಕಾರಿ ವಿನಯದಿ ಆಮೆಯು ಗೆಲುವಿಗೆ ಬೀಗದೆಯೋಚಿಸಿತು, ಗುರಿಯೆಡೆ ಲಕ್ಷವನಿಡದೆಸೋತಿತು ಮೊಲವು ಓಟವನು, ಕಲಿತರೆಬುದ್ದಿಯ ಒಳಿತಾಗುವುದು ಎಲ್ಲರಿಗೆ ಸ್ನೇಹದಿ ಹೀಗಿರಲೊಮ್ಮೆ ಮೊಲವನುಆಮೆಯ ಕಾಡಿನ ರಾಜನು ಕರೆದಿಹನುಅವಸರದಿ ಹೋಗಿರಿ ಪಕ್ಕದ ಕಾಡಿಗೆರಾಯಭಾರಿಯಾಗಿ ತುರ್ತುಚರ್ಚೆಗೆ ತಲುಪಲೇ ಬೇಕು ನಾಳೆಯೆ ಅಲ್ಲಿಗೆಕಾಡುಮೇಡು ಕೊರಕಲು ಕೆರೆ ನದಿಯುಕಣಿವೆಯು ಎಂತು ದೂರದ ಹಾದಿಯುಚಿಂತಿಸಿ ಹುಡುಕಿದರೊಂದು ಉಪಾಯ ಬೆಳಗಿನ ಜಾವಕೆ ಮೊಲದ ಬೆನ್ನಲಿಆಮೆಯು ಕುಳಿತು ಸವೆಯಿತು ಹಾದಿಕಾಡು ಮೇಡಲಿ ಅಡ್ಡ ಬರಲು ನೀರುಮೊಲವೇರಿತು ಆಮೆಯ ಬೆನ್ನು ಇಂತು ಉಪಾಯವ ಮಾಡಿದವುಪಕ್ಕದ ಕಾಡಿಲಿ ಸವಿನುಡಿಯಾಡಿದವುಕೆಲಸವ ಸಾಧಿಸಿ ಸಮಯ ಮೀರದೆದೊರೆಗಿತ್ತವು ವರದಿಯ ಸಂಭ್ರಮದಿ ಮಕ್ಕಳೆ ತಿಳಿಯಿರಿ ನಮ್ಮಯ ಶಕ್ತಿಗೆಕೂಡಲು ಬೇಕು ಗೆಳೆಯರ ಬಲವುಒಗ್ಗಟ್ಟಲ್ಲುಂಟು ನಲಿವು ಗೆಲುವುಕೂಡಿ ಬಾಳಿದರೆ ಸ್ವರ್ಗ ಸುಖವು
ಬೈಸಾಕಿಯು ಬೇಸರಿಸಿ,
ಚಿಗಿ ಚೈತ್ರದ ಪಡಿಯರಸಿ
ಮಗುವಂತೆ ಮುನಿಸೊಡೆಸಿ,
ಮೋತ್ಕರಿಸಿದೆ ಮಿಗಿಮಿಗಿಸಿ…
ಹೃದಿಹೃದಯಲು ಒಲವುದಿಸಿ Read Post »
You cannot copy content of this page