ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಬಾಪು ಮತ್ತು ವೈರುಧ್ಯ

ಎಷ್ಟೇ ವೈರುಧ್ಯಗಳಿದ್ದರೂ
ಅವನ್ನೆಲ್ಲ ದಾಟಿ ಮಹಾಮಾನವನಾಗಿಬಿಟ್ಟರು
ಕೆಸರನಲ್ಲಿದ್ದರು ಕೆಸರಿನಂತಾಗದೆ
ಕಮಲದಂತೆ ಅರಳಿ ಬಿಟ್ಟರು ನಮ್ಮ ಬಾಪು

ಬಾಪು ಮತ್ತು ವೈರುಧ್ಯ Read Post »

ಕಾವ್ಯಯಾನ, ಗಝಲ್

ಗಜಲ್ ಜುಗಲ್ ಬಂದಿ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಗಜಲ್-18

Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಅರುಣಾ ನರೇಂದ್ರ ನಿನ್ನ ಕಿರು ನಗೆ ನನ್ನೊಂದಿಗೆ ಮುನಿಸಿಕೊಂಡಾಗ ನಾ ಯಾರಿಗೆ ಹೇಳಲಿತೋಳ ತಲೆದಿಂಬು ಸರಿಸಿ ಹೊರಳಿ ಮಲಗಿಕೊಂಡಾಗ ನಾ ಯಾರಿಗೆ ಹೇಳಲಿ ಮುತ್ತಿನಲಿ ಸಿಂಗರಿಸಿ ಮುಖ ನೋಡಿ ಹಿಗ್ಗುತ್ತಿದ್ದವನು ನೀನುಪ್ರೀತಿಯ ಕರೆ ಧ್ವನಿ ಕಳೆದುಕೊಂಡಾಗ ನಾ ಯಾರಿಗೆ ಹೇಳಲಿ ಹೂವಾಗುವ ಮೊಗ್ಗಿನ ನಿದ್ರೆಯಲಿ ಬರಿ ಚಿಟ್ಟೆಯದೇ ಕನಸುಸತ್ಯ ಮುಸುಕು ಹಾಕಿಕೊಂಡಾಗ ನಾ ಯಾರಿಗೆ ಹೇಳಲಿ ನದಿಯಾಗಿ ನಿನ್ನೆದೆಯೊಳಗೆ ಹರಿದ ಧನ್ಯತೆ ಇದೆ ಸಾಜನ್ಬೆಳಕನೆ ಕುಡಿದು ಮತ್ತೇರಿಸಿಕೊಂಡಾಗ ನಾ ಯಾರಿಗೆ ಹೇಳಲಿ ಮತ್ತೆ ಮತ್ತೆ ಸೋಲುತ್ತಾಳೆ ಅರುಣಾ ಸಹನೆ ಪರಕಿಸುವ ನಿನ್ನ ಸಾಹಸಕ್ಕೆಒಲವು ಮಿಡಿವ ಹೃದಯದಿ ಸೂತಕ ಆವರಿಸಿಕೊಂಡಾಗ ಯಾರಿಗೆ ಹೇಳಲಿ

ಗಜಲ್ Read Post »

ಕಾವ್ಯಯಾನ

ಆಮೆಯೂ ಮೊಲವೂ

ಕಥನಕಾವ್ಯ ಆಮೆಯೂ ಮೊಲವೂ ಬೆಂಶ್ರೀ ರವೀಂದ್ರ ಭಾಗ ಒಂದು ಸ್ಪರ್ಧೆಗೆ ಆಮೆಯೂ ಮೊಲವುಟ್ರ್ಯಾಕಿನ ಗೆರೆಯಲಿ‌ ನಿಂತಿಹವುಓಟದ ರೇಸಿಗೆ ಅಣಿಯಾಗಿಹವು ಇದೆಂತಹ ಆಟ ತಮಾಷೆ ಜೂಟಾಟಮಜವಿದೆ ನೋಟ ಆಮೆ ಮೊಲದೋಟಕಾಡಿನ ಪ್ರಾಣಿಗಳಿಗೆ ಮೋಜಿನ ಮಾಟ ಕಿವಿಯನು ನಿಗುರಿಸಿ ಕಣ್ಣನು ಪಿಳುಕಿಸಿಸಮ ಎನಗಾರೆಂದು ಬೀಗಿಹ ಭೂಪಬೆಳ್ಳನೆ ಬೆಳುಪಿನ ಮೊಲ ಮಹರಾಯ ಕಾಲನು ಜಾಡಿಸಿ ಕತ್ತನು ಆಡಿಸಿಸುತ್ತಲೂ ನೋಡಿ ದೇವಗೆ ಪ್ರಾರ್ಥಿಸಿಓಟಕೆ ಸಿದ್ದವಾದನು ಆಮೆರಾಯ ಕತ್ತನು‌ ಕೊಂಕಿಸಿ ಕಾಲನು ಜಾಡಿಸಿಕಣ್ಣನು ಕೀಲಿಸಿ ಟ್ರ್ಯಾಕನು ವೀಕ್ಷಿಸಿಅಂಪೈರ್ ಸೀಟಿಯು ಜಿರಾಫೆರಾಯ ಮಿಂಚಿನ ವೇಗದಿ ಓಡಿತು ಮೊಲವುತೆವಳುತ ಸಾಗಿತು ಗುರಿಯೆಡೆ ಆಮೆಹೋ..ಎಂದಿತು ಪ್ರಾಣಿಯು ಗಿಡಮರ ಅರ್ಧದಾರಿ ಓಡಿದ ಮೋಲವುಕಂಡಿತು ತುಂಬಿದ ಹಸಿರು ಕಾವಲುಹಿಂತಿರುಗಿ ನೋಡಲು ಪೋಟಿದಾರ ಹಿಂದೆಲ್ಲೊ ಇಹನು ಈ ಆಮೆಭೂಪಬರುವ ತನಕ ಇಲ್ಲಿಗೆ ವಿಶ್ರಾಂತಿ ಪಡೆವೆಹುಲ್ಲೂ ನೀರು ಉಂಡು ಮಲಗಿದನು ಮೊಲಕೆ ಬಂದಿತು ಗಡದ್ದು ನಿದ್ದೆಕೇಳಿಸಿತೆಲ್ಲಡೆ ಗೊರಕೆಯ ಸದ್ದೆನಡೆಯಿತು ಆಮೆ ಗುರಿಯೆಡೆಗೆ ನಿದ್ದೆಲಿ ಮೊಲಕೆ ಗೆಲುವಿನ ಪದಕಖುಷಿಯಲಿ ಮಾಡಿ ಮತ್ತಷ್ಟು ನಿದ್ದೆಅಷ್ಟರಲಿ ಹೋ…ಎನ್ನುವ ಸದ್ದು “ಗುರಿ ಮುಟ್ಟುವ ತನಕ ನಿಲ್ಲದಿರಿ”ಮಾತನು ಮನಸಲಿ ಇಟ್ಟಿದ ಆಮೆಸದ್ದಿಲ್ಲದೆ ಗೆಲುವಿನ ಕಂಬವ ದಾಟಿತ್ತು ಕಾಡು ಪ್ರಾಣಿಗೀಣಿ ಹಕ್ಕಿಪಿಕ್ಕಿ ಕೂಡಿದವುಗೆಲುವಿನ ನಿಲುವಲಿ ಆಮೆಯ ನಿಲಿಸಿಕತ್ತಿಗೆ ಪದಕವ ತೊಡಿಸಿದವು ಸೋಮಾರಿಯಾಗದಿರಿ ಮಕ್ಕಳೆಗೆಲುವಿನ ಗುರಿಯು ಮನದೊಳಗಿರಲಿಶ್ರಮಕೆ ಫಲಸಿಗುವುದು ಶತಸಿದ್ದ. ಭಾಗ ಎರಡು ನೆನಪಿದೆಯೇ‌ ಮಕ್ಕಳೆ ನಿಮಗೆಮೊಲದಾಮೆಯ ಓಟದ ಆಟಕಾಡಿನಲಂತೂ ನಡೆದಿದೆ ಈಗಅದೇ ಮಾತಿನ ಮೋಜಾಟ ಓಟದ ವೀರ ಸೋತಿದ್ದೆಂತುತೆವಳುವ ಆಮೆ ಗೆದ್ದಿದ್ದೆಂತುಬುಡಮೇಲಾಗಿ ಲೆಕ್ಕಾಚಾರಹೀಗೂ ಉಂಟೆ ಅಚ್ಚರಿ ಹೂಟ ಹುಲ್ಲಿನ ಬಣಿವೆಲಿ ಚಿಗುರನು ಕಚ್ಚುತಚಿಂತಿಸಿ ಮೊಲವು ಕಿವಿಯನು ನಿಗುರಿಸಿಅರಿಯಿತು ಸೋಲಿನ ಗುಟ್ಟನು ಬಿಡಿಸಿಹ್ಞಾ…ನಾ.‌‌.ಸೋಮಾರಿ ದುರಹಂಕಾರಿ ವಿನಯದಿ ಆಮೆಯು ಗೆಲುವಿಗೆ ಬೀಗದೆಯೋಚಿಸಿತು, ಗುರಿಯೆಡೆ ಲಕ್ಷವನಿಡದೆಸೋತಿತು ಮೊಲವು ಓಟವನು, ಕಲಿತರೆಬುದ್ದಿಯ ಒಳಿತಾಗುವುದು ಎಲ್ಲರಿಗೆ ಸ್ನೇಹದಿ ಹೀಗಿರಲೊಮ್ಮೆ ಮೊಲವನುಆಮೆಯ ಕಾಡಿನ ರಾಜನು ಕರೆದಿಹನುಅವಸರದಿ ಹೋಗಿರಿ ಪಕ್ಕದ ಕಾಡಿಗೆರಾಯಭಾರಿಯಾಗಿ ತುರ್ತುಚರ್ಚೆಗೆ ತಲುಪಲೇ ಬೇಕು ನಾಳೆಯೆ ಅಲ್ಲಿಗೆಕಾಡುಮೇಡು ಕೊರಕಲು ಕೆರೆ ನದಿಯುಕಣಿವೆಯು ಎಂತು ದೂರದ ಹಾದಿಯುಚಿಂತಿಸಿ ಹುಡುಕಿದರೊಂದು ಉಪಾಯ ಬೆಳಗಿನ ಜಾವಕೆ ಮೊಲದ ಬೆನ್ನಲಿಆಮೆಯು ಕುಳಿತು ಸವೆಯಿತು ಹಾದಿಕಾಡು ಮೇಡಲಿ ಅಡ್ಡ ಬರಲು ನೀರುಮೊಲವೇರಿತು ಆಮೆಯ ಬೆನ್ನು ಇಂತು ಉಪಾಯವ ಮಾಡಿದವುಪಕ್ಕದ ಕಾಡಿಲಿ ಸವಿನುಡಿಯಾಡಿದವುಕೆಲಸವ ಸಾಧಿಸಿ ಸಮಯ ಮೀರದೆದೊರೆಗಿತ್ತವು ವರದಿಯ ಸಂಭ್ರಮದಿ ಮಕ್ಕಳೆ ತಿಳಿಯಿರಿ ನಮ್ಮಯ ಶಕ್ತಿಗೆಕೂಡಲು ಬೇಕು ಗೆಳೆಯರ ಬಲವುಒಗ್ಗಟ್ಟಲ್ಲುಂಟು ನಲಿವು ಗೆಲುವುಕೂಡಿ ಬಾಳಿದರೆ ಸ್ವರ್ಗ ಸುಖವು

ಆಮೆಯೂ ಮೊಲವೂ Read Post »

You cannot copy content of this page

Scroll to Top