ಮರಗಳ ಸ್ವಗತ ಸಾಂತ್ವಾನ
ಕವಿತೆ ಮರಗಳ ಸ್ವಗತ ಸಾಂತ್ವಾನ ಅಭಿಜ್ಞಾ ಪಿಎಮ್ ಗೌಡ ಹೇ ಮನುಜ.! ನಿನ್ನ ಸ್ವಾರ್ಥಕಾಗಿಪ್ರಕೃತಿಯನ್ನೆ ವಿಕೃತಿಗೈದುಇಳೆಯೊಡಲ ಬರಿದುಗೊಳಿಸಿಮಾರಣ ಹೋಮ ಮಾಡುತಧರೆಯ ಬಂಜರಾಗಿಸಿದ್ದು ನ್ಯಾಯವೆ.?ನಿನಗರಿವಿಲ್ಲದೆ ಅವಳೊಡಲನುಅಳಿವಿನಂಚಿನಲಿ ನಿಲ್ಲಿಸಿತರುಲತೆಗಳ ಕತ್ತನು ಹಿಚುಕಿಮಾರಾಟಕಿಳಿಸಿರುವೆಯಲ್ಲನೀನೆಂತಹ ಗೋಮುಖ ವ್ಯಾಘ್ರಿ.!! ಮೊಳಕೆಯಿಂದಿಡಿದು ಮರದವರೆಗೂಗಾಳಿ ನೆರಳು ನೀಡಿ ಮಳೆಯಲ್ಲಿಆಸರೆಯಾದರೆ ನನ್ನೆ ಕೊಂದುಅಹಂನ ಗದ್ದುಗೆಯಲಿ ತೇಲುತಿರುವೆಒಮ್ಮೆ ಯೋಚಿಸು ಓ.! ಮನುಜ…ಮಳೆಯಿಲ್ಲದೆ ಇಳೆ ಇರುವುದೆ.?ಇಳೆಯಿಲ್ಲದೆ ನೀನಿರುವೆಯಾ.?ನಿನ್ನ ಲಲಾಟಕೆ ನನ್ನೆ ಗುರಿಮಾಡಿರುವೆನಿನ್ನಾಟಿಕೆಯ ಅಲಂಕಾರಕೇಕೆನನ್ನ ಕಡಿದು ಮಾರಾಟಕಿಟ್ಟಿರುವೆ.? ಹವಾಮಾನ ವೈಪರಿತ್ಯಗಳುಂಟಾಗುವುದೆನಮ್ಮಿಂದ ಹೇ.!ಮನುಜ ನೀ ತಿಳಿಮಳೆ ಗಾಳಿ ನೀರಿನ ಉತ್ಪಾನ್ನದ ಮೂಲನಾವಲ್ಲವೇ.? ,ನಮ್ಮಿರುವಿಕೆಯಪ್ರಭಾವ ಮಳೆ ಬೆಳೆಯ ಸೊಬಗು!ಹೀಗಿರುವಾಗ ಕಾಡುಗಳಕಡಿದು ಕಾಂಕ್ರೀಟ್ ನಗರಗಳನಿರ್ಮಿಸಿದರೆ ಉಳಿಗಾಲವಿದೆಯೆ.?ಇಳೆಗೆ ಅನಾವೃಷ್ಟಿಯ ಭೀತಿ ಎದುರಾಗಿನಿಮ್ಮ ಕುಲದೊಂದಿಗೆ ಸಕಲಜೀವಿಗಳ ವಿನಾಶದಂಚಿಗೆ ತಳ್ಳುತಿರುವೆ.!! ಈಗಲಾದರು ಬಿಟ್ಟು ಬಿಡು ನಿನ್ನ ಸ್ವಾರ್ಥನಿಸ್ವಾರ್ಥ ನಿಷ್ಕಲ್ಮಶದಿ ಮುನ್ನಡೆದುಪರಿಸರ ಉಳಿಸಿ ಅನಾಹುತಗಳ ಆವಾರತಪ್ಪಿಸು.! ಇಲ್ಲದಿರೆ ಅನುಭವಿಸುಘನಘೋರ ಪರಿಸ್ಥಿತಿ ಅಲೆಗಳ ಆರ್ಭಟವನಾಡ ಉಳಿಸಲು ಪ್ರಯತ್ನಿಸುನಿನಗಷ್ಟೆ ಅಲ್ಲ ಈ ಪ್ರಕೃತಿ ಪರಿಸರನಿನ್ನ ಮುಂದಿನ ಪೀಳಿಗೆಗು ಉಳಿಸುತಪರಿಸರ ಸುರಕ್ಷತೆಯ ಜಾಗೃತಿ ಮೂಡಿಸಿನಾಡು ಉಳಿಸಿ ಕಾಡನ್ನು ಬೆಳಸು ಮನುಜ|| *************************************
ಮರಗಳ ಸ್ವಗತ ಸಾಂತ್ವಾನ Read Post »









