ಮಣ್ಣು ,ಅನ್ನ ಮತ್ತು ಪ್ರಭು
ಕವಿತೆ ಮಣ್ಣು ,ಅನ್ನ ಮತ್ತು ಪ್ರಭು ಬಿ.ಶ್ರೀನಿವಾಸ ನೆಲಕೆ ಬಿದ್ದರೆ ಅನ್ನದಾತದಂಗೆಯೇಳುತ್ತದೆ ಅನ್ನ * ಮಕ್ಕಳ ಮುಂದೆ ಅಪ್ಪ ಅಳಬಾರದು ಅಪ್ಪನ ಮುಂದೆ ಮಕ್ಕಳು ಸಾಯಬಾರದು ಪ್ರಭುಗಳ ಮುಂದೆ ಪ್ರಜೆಗಳು ನರಳಬಾರದು ಸುಳ್ಳಾಯಿತುಲೋಕರೂಢಿಯ ಮಾತು. * ಮಣ್ಣಿನೆದೆಯ ಮೇಲೆಯೆ ಇದ್ದವು ಪಾದಗಳುನೆಲದ ಮೇಲಿರುವ ತನಕ ಅದೇ ಮಣ್ಣಿನ ಮೃದು ಪಾದಗಳುನೆಲದಡಿಗೆ ಸೇರಿದವನ ಎದೆಯ ಮೇಲೆ * ಮಣ್ಣಿಗೂಅಪ್ಪನಿಗೂ ಸಂಬಂಧ ಕೇಳುವಿರಿ ನೀವು ಇದೆಅಜ್ಜ-ಮೊಮ್ಮಗನ ಸಂಬಂಧ! * ಉಣ್ಣುವ ಅನ್ನದ ಕಣ್ಣುಎದುರಿಸಲಾಗದ ಕೊಲೆಗಾರ ಹೇಡಿಹೇಡಿಯೆಂದು ಕಿರುಚಾಡುತ್ತಾನೆ * ಕಳಚಿ ಬಿದ್ದಿವೆಪದವಿಗಳು,ಪುರಸ್ಕಾರಗಳುಅಕ್ಷರಗಳು….ಬೀದಿಯ ತುಂಬಾ ನಾನೀಗಲೋಕದ ಸಾಲಿಯ ಪಾಲಿನ ಬೆತ್ತಲೆ ಅಪರಾಧಿ * ಮಾತುಮಾತು…ಬರೀ ಮಾತೂಮಾತಾಡುತ್ತಲೇ ಇದ್ದಾನೆ ಪ್ರಭು ದಯವಿಟ್ಟು ಯಾರಾದರೂ ಸುಮ್ಮನಿರಿಸಿನಾವು ಉಸಿರಾಡಬೇಕಿದೆ. *********************
ಮಣ್ಣು ,ಅನ್ನ ಮತ್ತು ಪ್ರಭು Read Post »









