ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1)ಹೆಣ್ಣಲ್ಲವೇ ನೀ :ಕಲ್ಲು ರೂಪದಿ ಕೂಡಾಮಮತೆ ಸೆಲೆ. 2)ಕಲ್ಲಾಗಿ ಹೋದೆ :ಸ್ವಾರ್ಥಿ ಜಗವು ಕೊಟ್ಟನೋವು ಕಾಣಿಕೆ. 3)ಹಣೆಯ ಬೊಟ್ಟುಅವನಿಟ್ಟ ನೆನಪುಹೃದಯೋಡೆಯ 4)ಕಾದು ಕಲ್ಲಾದೆ :ನಲ್ಲನ ಆಗಮನಕಾಮನಬಿಲ್ಲು. 5)ಅಹಲ್ಯ ರೂಪಶ್ರೀ ರಾಮ ಬರುವನೇ,ಕಲಿಯುಗದಿ. 6)ಗಂಭೀರ ಮೊಗಕಂದನಂದದ ಮನಬಾಳು ನಂದನ. 7)ಮೌನದ ತಾಣಹೆಣ್ಣು ಜೀವದ ಕಣ್ಣು,ತೀರದ ಋಣ. *************************************

ಹಾಯ್ಕುಗಳು Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಅಶೋಕ ಬಾಬು ಟೇಕಲ್ ಹಾಲುಂಡ ಹಸುಳೆಯೇ ಹದ್ದಂತೆ ಕುಕ್ಕಿ ಕುಕ್ಕಿ ತಿನ್ನುತ್ತಿದೆ ಈಗಹೊತ್ತೊತ್ತಿಗೂ ಮಡಿಲೇರಿದ ಕೂಸೇ ಕಾಳ ಸರ್ಪದಂತೆ ಬುಸುಗುಟ್ಟುತ್ತಿದೆ ಈಗ ನಿತ್ರಾಣಗೊಂಡು ಪಾತಾಳ ತುಳಿದಾಗ ಕೈ ಹಿಡಿದು ಮೇಲೆತ್ತಿದ್ದೆಕೃತಜ್ಞತೆಯ ಮರೆತು ನೇಣು ಕುಣಿಕೆ ಹುರಿಗೊಳಿಸುತ್ತಿದೆ ಈಗ ಮಾನವೀಯತೆ ಮುಂದೆ ಮಿಕ್ಕೆಲ್ಲವೂ ಗೌಣವೆಂದೇ ಭಾವಿಸಿದ್ದೆಅದೇ ಮಾನವೀಯತೆಗೆ ಚಟ್ಟ ಕಟ್ಟಿ ಬೀದಿಗಿಟ್ಟು ಹರಾಜಾಕುತ್ತಿದೆ ಈಗ ಊರಿಗೆ ಊರೇ ಅಪಸ್ವರದ ಕೊಳಲು ನುಡಿಸುತಿತ್ತು ಅಲ್ಲಿ !ಬುದ್ಧ ಸಾಗಿ ಬಂದ ಹಾದಿಯೂ ಮುಳ್ಳುಗಳನು ಮೊಳೆಸುತ್ತಿದೆ ಈಗ ಈಚಲು ಮರದ ನೆರಳು ಮಜ್ಜಿಗೆಗೆ ಯೋಗ್ಯವಲ್ಲ ಎಂದು ಅಬಾಟೇ ಗೆ ಹೇಳಿದ್ದೆಕಂಡವರ ಕಣ್ಣು ನಶೆ ಕುಡಿದು ಅಮಲೇರಿ ಬೊಬ್ಬೆ ಇಡುತ್ತಿದೆ ಈಗ. *************************************

ಗಜಲ್ Read Post »

ಕಾವ್ಯಯಾನ

ಕವಿತೆ ಮತ್ತೆ ಯುಗಾದಿ ಹೊಸ ವರ್ಷವ ಸ್ವಾಗತಿಸುತ ಬಂದಿದೆ ಯುಗಾದಿಯುಗ ಯುಗಗಳ ಹೊಸ ಪಲ್ಲವಿಯನು ಹಾಡಿ. ಮಾರನ ಹೂ ಬಾಣದ ಜುಮ್ಮೆನ್ನುವ ಅಮಲುಪ್ರತಿ ಹೃದಯದ ಮೇಲೆರಗಿದೆ ಮೈಗಂಧದ ಘಮಲು. ಎಲೆಯುದುರುವ ಕಾಡಲ್ಲಿ ಚಿಗುರಿನ ದನಿ ಹಾಡುಪ್ರತಿ ಗಿಡಗಳು ಹಸಿರುಟ್ಟಿವೆ ಹೂ ಬಟ್ಟೆಯ ನೋಡು. ಹೂ ಹೂಗಳ ಕೇಸರದಲಿ ದುಂಬಿಯ ಹೂ ಮುತ್ತುಗಿಡ ಮರಗಳು ಅನುಭವಿಸಿವೆ ಪ್ರಣಯದ ನಶೆ ಮತ್ತು! ಒಣ ಶಿಶಿರವು ಚೇತರಿಸದು ಹೂ ಚೈತ್ರದ ಹೊರತುವನಮಾಲಿಯ ಅಡಿ ಅಡಿಯಲು ಮಧು ಮಾಸದ ಗುರುತು. ಪ್ರತಿ ಕಾಡಲು ಬರಿ ಬಯಲಲು ಹೂ ಹಣ್ಣಿನ ರಾಶಿಹಕ್ಕಿಗಳುಲಿ ಇಂಪಲು ಸವಿ ಕಂಪನು ಸೂಸಿ. ಯುಗ ಯುಗಾದಿಯು ಬರುತಿರಲಿ ನಮ್ಮಯ ಹೊಸತನಕೆನಾಳೆಯ ಸದ್ವಿಕಾಸಕೆ ನವ ಚೈತನ್ಯದ ಹರಕೆ ************************************************************ ಫಾಲ್ಗುಣ ಗೌಡ ಅಚವೆ

Read Post »

ಕಾವ್ಯಯಾನ, ಗಝಲ್

ಗಜ಼ಲ್

ಗಜ಼ಲ್ ಎ. ಹೇಮಗಂಗಾ ಕೊರೋನಾ ಕನಸುಗಳ ಕಮರಿಸಿದೆ ಮರಳಿ ಊರ ಸೇರುವುದು ಹೇಗೆ ?ಹಾಳು ಸುರಿವ ಬೀದಿ ಮಸಣವಾಗಿದೆ ಮರಳಿ ಊರ ಸೇರುವುದು ಹೇಗೆ ? ಶಾಂತವಾಗಿ ಹರಿಯುತ್ತಿದ್ದ ಬಾಳಕಡಲಿನಲಿ ಎಣಿಸದ ಉಬ್ಬರವಿಳಿತಇರುವ ನೆಲೆ ಜೀವಗಳ ನಲುಗಿಸಿದೆ ಮರಳಿ ಊರ ಸೇರುವುದು ಹೇಗೆ ? ದುಡಿಮೆ ಆದಾಯವಿಲ್ಲದ ಬದುಕು ನರಕಸದೃಶವಲ್ಲದೇ ಮತ್ತೇನು ?ತಿನ್ನುವ ಅನ್ನಕೂ ತತ್ವಾರವಾಗಿದೆ ಮರಳಿ ಊರ ಸೇರುವುದು ಹೇಗೆ ? ಅನುಕಂಪವಿಲ್ಲದ ಸಾವು ಹಗಲಲ್ಲೂ ಭೀತಿಯ ಕಾರಿರುಳ ಹರಡಿದೆಬೆದರಿದ ಮನ ದೃಢತೆ ಕಳೆದುಕೊಂಡಿದೆ ಮರಳಿ ಊರ ಸೇರುವುದು ಹೇಗೆ ? ತಿಳಿದಿಲ್ಲ ಹೊಂಚು ಹಾಕಿದ ಹದ್ದಿನಂತೆ ಎಂದೆರಗುವುದೋ ಎಂದುಮದ್ದಿಲ್ಲದ ಮಹಾಮಾರಿ ಹೆದರಿಸಿದೆ ಮರಳಿ ಊರ ಸೇರುವುದು ಹೇಗೆ ? *****************

ಗಜ಼ಲ್ Read Post »

ಕಾವ್ಯಯಾನ

ಅರಳುವುದೇಕೋ.. ?ಬಾಡುವುದೇಕೋ

ಕವಿತೆ ಅರಳುವುದೇಕೋ.. ?ಬಾಡುವುದೇಕೋ ಲಕ್ಷ್ಮೀ ಮಾನಸ ಕಾಲದ ಗಾಲಿಯುಉರುಳುತ್ತಾ,ಜವದಿಂದೆಸೆದಅಗಣಿತ ಪ್ರಶ್ನೆಗಳಸರಮಾಲೆಯಲ್ಲಿ,ಮೃದು ಹೃದಯ ಸಿಲುಕಿ,ಅರಳಿ ಮುದುಡುವುದುರಅರ್ಥ ಅರಿಯಲು,ಕಾಲವನ್ನೇ ಮರೆಯುತಿದೆ….. ಕುಸುಮಗಳ ಸರಮಾಲೆಯಲ್ಲಿ,ಸುಮಗಳಿಂದು  ನಲುಗುತಿವೆ,ನೀರವ ಮೌನದಲ್ಲಿ….,ಬಿಸಿಲು -ಮಳೆಯೆನ್ನದೆ,ಬಾಳ ಕೊನೆಯನರಿಯದೆ…… ತಾನಾಗಿಯೂ ಅರಳಲಿಲ್ಲ,ತಾನಾಗಿಯೂ ಮುದುಡಲಿಲ್ಲ,….,ಅರಳುವ ಆಸೆಯೂ ಇರಲಿಲ್ಲ,ಮುದುಡುವ ಬಯಕೆಗೂ ಬರವಿಲ್ಲ…, ಬಿಡಿಸಲಾಗದ ಗಂಟುಗಳಲ್ಲಿ,ಉತ್ತರವಿಲ್ಲದ ಪ್ರಶ್ನೆಗಳಲ್ಲಿ,ಪ್ರಶ್ನೆಗಳಿಗೇ ಪ್ರಶ್ನೆಯಾಗಿ,ಬಾಳುತಿರುವ  ಈ ಕುಸುಮಅರಳುವುದೇಕೋ… ?ಮುದುಡುವುದೇಕೋ… ? ************************

ಅರಳುವುದೇಕೋ.. ?ಬಾಡುವುದೇಕೋ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಅರುಣಾ ನರೇಂದ್ರ ನಿನ್ನೆದೆಗೆ ಒರಗಿ ವೇದನೆ ಮರೆಯಬೇಕೆಂದಿರುವೆ ದೂರ ಸರಿಸದಿರುನಿನ್ನ ಮಡಿಲ ಮಗುವಾಗಿ ನಗೆ ಬೀರಬೇಕೆಂದಿರುವೆ ದೂರ ಸರಿಸದಿರು ಬೀಸುವ ಗಾಳಿ ಸೆರಗೆಳೆದು ನಕ್ಕು ಕಸಿವಿಸಿಗೊಳಿಸುತ್ತಿದೆನಿನ್ನ ತೋಳ ತೆಕ್ಕೆಯಲಿ ಚುಕ್ಕಿಗಳ ಎಣಿಸಬೇಕೆಂದಿರುವೆ ದೂರ ಸರಿಸದಿರು ಕಡಲ ಮೊರೆತ ಕಿವಿಗೆ ಅಪ್ಪಳಿಸಿದಾಗ ಜನ್ಮ ಜನ್ಮದ ವಿರಹ ಕೇಕೆ ಹಾಕುತ್ತದೆಮೈ ಬೆವರ ಗಂಧದಲಿ ರಾತ್ರಿಗಳ ಕಳೆಯಬೇಕೆಂದಿರುವೆ ದೂರ ಸರಿಸದಿರು ಉಕ್ಕೇರುವ ಯೌವನದ ಮಧು ಬಟ್ಟಲು ನಿನ್ನ ತುಟಿ ಸೋಕಲು ಕಾಯುತ್ತಿದೆನಶೆ ಏರಿದ ನಿನ್ನ ಕಣ್ಣ ಕೊಳದಲ್ಲಿ ಈಜಾಡಬೇಕೆಂದಿರುವೆ ದೂರ ಸರಿಸದಿರು ರಸಿಕತೆ ರಂಗೇರಿದಾಗ ಕೋಣೆಯ ದೀಪ ನಾಚಿ ಮುಖ ಮುಚ್ಚಿಕೊಳ್ಳುತ್ತದೆಅರುಣಾ ನೀ ಕೊಟ್ಟ ಹಿಡಿ ಪ್ರೀತಿ ಉಣ್ಣಬೇಕೆಂದಿರುವೆ ದೂರ ಸರಿಸದಿರು *******************************************

ಗಜಲ್ Read Post »

ಕಾವ್ಯಯಾನ

ನಿನ್ನ ಪಾಪದ ಹೆಣ

ಕವಿತೆ ನಿನ್ನ ಪಾಪದ ಹೆಣ ಬೆಂಶ್ರೀ. ರವೀಂದ್ರ ಹೇಳಿ ಬಿಡಬಹುದಿತ್ತು ಈ ಮಾತುಗಳಪ್ರತಿಮೆ ರೂಪಕಗಳಲ್ಲಿಕತೆಯೊಂದರ ಮುಸುಕಿನಲ್ಲಿಪುರಾಣಗಳ ಪುಣ್ಯಕತೆಗಳ ಅವತರಣಿಕೆಗಳಲಿಅಥವಾಆಧುನಿಕತೆಯ ಹೆಸರಿನಲಿಎಲ್ಲೆ ಮುರಿದಿದ್ದನ್ನು ತರ್ಕಿಸಿ ಸುಸಂಬದ್ಧಗೊಳಿಸಬಹುದಿತ್ತು.ಪ್ರಾಣಿಗಳ ಹುಟ್ಟುಗುಣವಿದು ಎಂದು ಮನಶ್ಶಾಸ್ತ್ರದ ಮೆರಗನೀಯಬಹುದಿತ್ತು ಹೇಳಿಬಿಡುತ್ತೇನೆ ಎಲ್ಲವೀಗಬಟಾಬಯಲಲ್ಲಿ ನಿಂದುನಿನಗೆ ನಿನ್ನಂತವರಿಗೆ ಹಿಂದಿನವರಿಗೆ ಮುಂದಿನವರಿಗೆ ಸಾಕು ಸಾಕಾಗಿದೆನಿಶಸ್ತ್ರಿಯ ಮೇಲೆ ದುರಹಂಕಾರದ ನಿನ್ನ ಶಸ್ತ್ರವ ತೂರಿ ಆಕ್ರಮಿಸುವುದನ್ನು ಸಹಿಸಹಿಸಿ. ಮತ್ತಿಂದುಪೋಲಿಸು ಠಾಣೆಗಳಲ್ಲಿ, ಪತ್ರಿಕೆಗಳಲಿ, ಮುಗಿಲಿಗೆ ಲಗ್ಗೆ ಹಾಕಿದ ಭುಗಿಲುಮಾಧ್ಯಮಗಳಲಿಗುಪ್ತ ವಿಚಾರಣೆಗಳಲಿ ನ್ಯಾಯಾಲಯಗಳಲಿ ಮತ್ತೆನನ್ನ ನಗ್ನಗೊಳಿಸಿ ಹುರಿದು ಮುಕ್ಕುವ ನಿನಗೆ ಹಳೆಯದು,ಹೊಸದಾಗಿ ಹೊಸೆದ ಹಳೆಯಶಾಸ್ತ್ರಗಳ ಧಿಕ್ಕರಿಸಿ ಹೇಳಿಬಿಡುವೆನಾನೀಗ ಬರಿಯ ಸಂತ್ರಸ್ತೆಯಲ್ಲ,ಶಸ್ತ್ರಾಸ್ತ್ರ ಸಜ್ಜಿತೆಮುರಿದುಬಿಡುವೆ ಎಲ್ಲ ಮುರಿದುಬಿಡುವೆ. ಕಾಡುಮೇಡಲಿ ಅಲೆದೆ ಕಾಡೆಂದರಿಯದೆಕಾಡು ಪ್ರಾಣಿಯೆ ನಿನ್ನ ಜಾಡನರಿಯದೆ,ಸುಖವುಂಡು ನೋವಿತ್ತು ನೀಹರಿದು ಮುಕ್ಕಿಬಿಟ್ಟೆ ; ನೆಲಕೆ ಒತ್ತಿಬಿಟ್ಟೆ ಬರೆದ ಶಾಸ್ತ್ರಗಳಲಿ ನೆಯ್ದ ಸೂತ್ರಗಳಲಿನಿಲ್ಲಿಸಿಬಿಟ್ಟೆ ಎನ್ನ ಬಾಗಿಲ ಹೊರಗೆ ಜಾಣತನದಲಿನದಿ ತಟಾಕಗಳಲಿ ನಾಗರೀಕತೆಯ ಕಟ್ಟಿದೆನೆಂಬ ಬಿಮ್ಮಲಿಬುವಿ ನದಿಗಳ ಬಳಸಿ ನನ್ನ ಹೆಸರಿಟ್ಟುಆರತಿಯ ಜ್ವಾಲೆಯಲಿ ಕರಕಾಗಿಸಿಟ್ಟೆ ಜಗದ ಉದ್ದಗಲ ಅಂಗುಲಂಗುಲ ಲಂಗುಲಗಾಮಿಲ್ಲದೆ ಹೇಸಿಗೆಯ ಮಾಡಿಮನಸು ಕೊರಾಡಾಗಿಸಿನನ್ನ ಆಳ ಹೊರಟೆ, ಮೇಲಾಳಾಗಿಆಳಕೆ ಅದುಮಿ ಆಳ ಮಾಡಿಬಿಟ್ಟೆ ನೀನು ಮಾಡಿದಯುದ್ದಗಳಿಗೆ ಶಸ್ತ್ರಾಸ್ತ್ರವೆನ್ನ ಮಾಡಿದೆಫಿರಂಗಿಗಳ ಗುಂಡುಗಳಲಿ ಸೀಳಿಬಿಟ್ಟೆಬಸಿದ ರಕ್ತವ ಕ್ಯಾನ್ವಾಸಿನಲ್ಲಿ ಚೆಲ್ಲಿ ನವ್ಯಕಲೆಯೆಂದು ಸಾರಿಬಿಟ್ಟೆ ಎದೆಯ ನುಡಿಯನು ಎರಡಾಗಿಸಿಒಳಾಂಗಳದ ಭಾನಗಡಿಯ ಬಚ್ಚಿಟ್ಟೆನನ್ನ ಚಿಟ್ಟೆಯೆಂದು ಬಿಟ್ಟೆ. ನಾನಿನ್ನು ಬಿಡುವುದಿಲ್ಲನನ್ನ ಕೈ ಕಾಲಿಗೆ ಕೋಳವಿಕ್ಕಲುಪುಕಪುಕಿಸಿಸುವ ನಿನ್ನ ಪುಕ್ಕಲುತನಕೆಸೋಗದಂಬರ ತೊಡಲುಇನ್ನು ಆಗಲಾರೆ ನಿನ್ನ ತೆಕ್ಕೆಯ ಮುಳ್ಳುಗಳಿಗೆ ಮಗ್ಗುಲು ಹಿಮಾಲಯದ ತುದಿಗೆ ಹೋಗುವೆಕನ್ಯಾಕುಮಾರಿಯ ಅಂಚಿಗೆ ಸಾಗುವೆಕೂಗಿ ಹೇಳುತ್ತೇನೆ, ಬೀಳಲಾರೆ ಸಂಚಿಗೆನೋವುಗಳ ಎದೆಯಲ್ಲಿಟ್ಟುದೈನ್ಯತೆಯ ಬೇಡಿನಿನ್ನ ಅನುಕಂಪಿತ ಕೂಸು ನಾನಾಗಲಾರೆಶಸ್ತ್ರವೆತ್ತುವೆ,ನಿನ್ನ ಪಾಪದ ಹೆಣವಾದರೂ ಸರಿಯೆ, ಸಂತ್ರಸ್ತೆಯಾಗಲಾರೆ. **************************************************

ನಿನ್ನ ಪಾಪದ ಹೆಣ Read Post »

You cannot copy content of this page

Scroll to Top