ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ಗಝಲ್ ಗಝಲ್ ಕೆ.ಸುನಂದಾ. ಸುಂದರ ವದನಕೆ ಕುಂದಾಗುವ ಬಣ್ಣ ಬಳಿಯಬೇಡ ಗೆಳೆಯಅದೆಷ್ಟೋ ಅಂದದ ಕನಸುಗಳಿಗೆ ಕಲ್ಲು ಹೊಡೆಯಬೇಡ ಗೆಳೆಯ ಸಾಧಿಸಬೇಕೆಂಬ ಹಂಬಲದಿ ಆಸರೆಯ ಎಳೆ ಹಿಡಿದಿರುವೆನುಕಷ್ಟಗಳಮೆಟ್ಟಿ ಕಟ್ಟಿರುವ ಭಾವಗಳ ಭವನಕೆ ಕಿಚ್ಚಾಗಬೇಡ ಗೆಳೆಯ ಹೆಣ್ಮನ ಮೃದುವೆಂದು ಮಧುರವಾಗಿ ನುಡಿದುಮೋಸ ಮಾಡಿದಿರು ಹೃದಯ ಗೆದ್ದೆನೆಂಬ ಹಮ್ಮಿಂದ ಹದವಾದಮೇಲೆ ಒದೆಯಬೇಡ ಗೆಳೆಯ ಮುನಿಯುವ ಮೊದಲು ಒಲಿದು ಬರುವಳು ಹೆಣ್ಣು ಘಾಸಿಗೊಳಿಸದಿರುಕೂಸಿನಂತಾಕೆ ಪೊರೆದಿಹಳು ನಿನ್ನಾಸೆಗಳನು ಮನ ನೋಯಿಸಬೇಡ ಗೆಳೆಯ ತುಸು ಕಣ್ಣಲ್ಲಿ ಕಣ್ಣಾಗಿ ನೋಡು ಮಮತೆ ಹರಿದೀತು ನಿನ್ನೊಡಲೊಳುನಂದೆಯ ಆನಂದಕೆ ಮಂದಸ್ಮಿತ ಸಾಕು ನಕ್ಕು ಹಂಗಿಸಬೇಡ ಗೆಳೆಯ *********************************** ಕೆ.ಸುನಂದಾ

ಗಝಲ್ Read Post »

ಕಾವ್ಯಯಾನ

ಕವಿತೆ ಹುಟ್ಟುವಾಗ

ಕವಿತೆ ಕವಿತೆ ಹುಟ್ಟುವಾಗ ಅಬ್ಳಿ,ಹೆಗಡೆ ಸೂರ್ಯ,ಸಾಯುತ್ತಿದ್ದ.ಕಾಯುವಹಾಗಿಲ್ಲ,ತಿರುಗಿ ಹುಟ್ಟುವವರೆಗೆ.ಕತ್ತಲು ಕಳೆಯುವವರೆಗೆ.ಪ್ರಸವವೇದನೆ ತಾಯಿಗೆ–ಭಯ,ಆತಂಕ,ಸಂತಸಒಟ್ಟೊಟ್ಟಿಗೆ,ಹೊಟ್ಟೆಯೊಳಗೆಕೈ,ಕಾಲಾಡಿಸುವ ಪುಟ್ಟ-ಕವಿತೆ,ದೈತ್ಯ ಪ್ರಸವವಾದರೆ‌ ಅಳಿವು,ಉಳಿವಿನ ಪ್ರಶ್ನೆ.ತಂದೆಯಾರೊ ಗೊತ್ತಿಲ್ಲ.ವ್ಯಭಿಚಾರಿಣಿ ಪಟ್ಟ ಗಟ್ಟಿಆಗುವ ಆತಂಕ,ಒಳಗೊಳಗೆ,ಅಸಾಧ್ಯ-ನೋವಿನಲ್ಲೂ ತಾಯ್ತನ-ದ ಖುಷಿ,ಅಪ್ಯಾಯಮಾನ.ಸುಖ ಪ್ರಸವ ಕತ್ತಲಲ್ಲಿ,ಕಣ್ತೆರೆಯಬೇಕು-ಮುದ್ದು ಕವಿತೆ,ಹುಟ್ಟುವಹೊಸ ಬೆಳಕಲ್ಲಿ.ತನ್ನ,ಪುಟ್ಟ,ಪಿಳಿ,ಪಿಳಿಕಣ್ಣುಗಳಿಂದ ನೋಡಬೇಕು,ನಿಚ್ಚಳ ಬೆಳಕಲ್ಲಿ,ಹೊಚ್ಚ ಹೊಸ ಜಗತ್ತನ್ನು.ಮುಗಿಲೆತ್ತರಕ್ಕೆ ಎದ್ದುನಿಲ್ಲಬೇಕು ನೀಳಕಾಯಳಾಗಿ.ತಾಯ್ತನದ ಸಾರ್ಥಕತೆಇರುವದೇ ಇಲ್ಲಿ.ಭಯ,ಆತಂಕ,ನೋವು,ಸಂತಸ ಎಲ್ಲದರಸಾರ್ಥಕತೆಯೂ ಇಲ್ಲೆ.ಕತ್ತಲಲ್ಲಿ ಹುಟ್ಟಿದಕವಿತೆಯಲ್ಲಿ. **************************

ಕವಿತೆ ಹುಟ್ಟುವಾಗ Read Post »

ಕಾವ್ಯಯಾನ

ಮಾಯಾಮೃಗ

ಕವಿತೆ ಮಾಯಾಮೃಗ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಸುಡು ಬಿಸಿಲಲ್ಲಿ ಅಲೆದಾಡಿದಧೂಳು ಮೈಯ ಗಾಳಿಗೆ ಜ್ವರವೇರಿಇಳಿದಿದೆ ಹರಿವ ನೀರಿನಲೆಗೆ ಗಾಳಿ ಮೈಕೊಡವಿದಲ್ಲಿಉದುರಿದ ಬಕುಳ ಹೂವಿಗೆ ವಿರಹ ಬೆಂಕಿಹಾ! ಹಾ! ಎನುತ ತುಂಬಿಯ ಚುಂಬನದ ನೆನಪಲ್ಲಿ ಮೈನೆನೆದುಅಲೆಗಳಿಗೆ ಮೈಯೊಡ್ಡಿ ತೇಲಿ ಹೋಗಿದೆ. ಮರಗಿಡ ಬಳ್ಳಿಗಳ ಮೈತುಂಬಮದನಶರ ನಾಟಿ ನೇಸರಗೆ ಬಸಿರಾಗಿಮೊಗ್ಗುಗಳ ಹೆತ್ತು ತೊಟ್ಟುಗಳ ತೊಟ್ಟಿಲಲಿ ತೂಗಿಕೆಂಪು ಚಿಗುರು ಬೆರಳುಗಳಹಸಿಮೈ ಬಾಣಂತಿಕೇಶಗಳ ಬಿಚ್ಚಿ ಮಳೆನೀರ ಕಾದಿದೆ ಚಿತ್ರಗಳು ತಮ್ಮನ್ನು ತಾವೆಬರೆದುಕೊಂಡಂತೆಹಕ್ಕಿಗಳು ರೆಕ್ಕೆ ಬಿಡಿಸಿ ಚಿಮ್ಮಿಬಾಂದಳವ ಬಿಳಿ ಹಾಳೆ ಮಾಡಿವೆಅವನು ಬಿಡಿಸಿದ ಚಿತ್ರದಂಥಪ್ರಕೃತಿಗೆ ಜೀವ ಬಂದುಬಿಟ್ಟ ಕಣ್ಣಲಿ ಆಗಸದ ಕನ್ನಡಿಯಲಿತನ್ನ ಬಿಂಬ ಹುಡುಕಿದೆ ಸೀತೆಯ ಮನವುಜಿಂಕೆಯ ಹಿಂದೆ ಜಿಗಿಜಿಗಿದು ಚಿಮ್ಮಿದಂತೆನನ್ನ ಹೃದಯವಿಂದು ನಿನ್ನ ಹಿಂದೆಯೇ ಅಲೆದುಮಾಯವಾಗಿದೆ ಮಾಯಾಮೃಗಸಿಕ್ಕರೆ ಮೂಗುದಾರಹಾಕಬೇಕು ***************************

ಮಾಯಾಮೃಗ Read Post »

ಕಾವ್ಯಯಾನ

ಕವಿತೆಯೇ ಎಚ್ಚರ, ಇದು ಅತ್ಯಾಚಾರಿಗಳ ಕಾಲ..

ತಾಯೇ,
ಎದೆಗೆ ತಟ್ಟಿದ ನೋವ
ತುದಿ ಬೆರಳಿಗಂಟಿಸಿಕೊಂಡು ಬದುಕಿ ಬಿಡು
ನಿಜದ ಕೆಂಡವ ಉಡಿಯೊಳಗಲ್ಲಲ್ಲ
ಅಂಗೈಯೊಳಗಿಟ್ಟುಕೊಂಡು ಉಸಿರಾಡು

ಕವಿತೆಯೇ ಎಚ್ಚರ, ಇದು ಅತ್ಯಾಚಾರಿಗಳ ಕಾಲ.. Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ರತ್ನರಾಯಮಲ್ಲ ಅಳಬೇಕು ಎಂದಾಗಲೆಲ್ಲ ಕನ್ನಡಿಯ ಮುಂದೆ ನಿಲ್ಲುವೆನಗಬೇಕು ಅನಿಸಿದಾಗಲೆಲ್ಲ ಸಮಾಧಿಯ ಮುಂದೆ ನಿಲ್ಲುವೆ ಎಲ್ಲರೂ ಬೇಕೆನಿಸಿದಾಗಲೆ ಯಾರೂ ಬೇಡವೆನಿಸುತ್ತಾರೆಶಾಂತಿ ಬಯಸಿದಾಗಲೆಲ್ಲ ಮಸಂಟಿಗೆಯ ಮುಂದೆ ನಿಲ್ಲುವೆ ಬದುಕು ಆಟವಾಡುತಿದೆ ಹೆಜ್ಜೆ ಹೆಜ್ಜೆಗೂ ನನ್ನ ಜೊತೆಯಲ್ಲಿಬಾಳು ಬೇಡವೆನಿಸಿದಾಗಲೆಲ್ಲ ಗೋರಿಯ ಮುಂದೆ ನಿಲ್ಲುವೆ ಉಸಿರಾಡಲು ನನ್ನ ಗಾಳಿಗಾಗಿ ನಾನು ಹುಡುಕುತಿರುವೆ ಇಲ್ಲಿಪ್ರೀತಿ ಬೇಕೆನಿಸಿದಾಗಲೆಲ್ಲ ನಿನ್ನ ಮನೆಯ ಮುಂದೆ ನಿಲ್ಲುವೆ ಜೀವನವು ತೂಗುಯ್ಯಾಲೆಯಲ್ಲಿ ಕಣ್ಣಾಮುಚ್ಚಾಲೆ ಆಡುತಿದೆಸಾಯಬೇಕು ಎನಿಸಿದಾಗಲೆಲ್ಲ ‘ಮಲ್ಲಿ’ಯ ಮುಂದೆ ನಿಲ್ಲುವೆ ************************************

ಗಜಲ್ Read Post »

You cannot copy content of this page

Scroll to Top