ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಅಮ್ಮನ ದಿನಕ್ಕೊಂದು ಕವಿತೆ

ಅಮ್ಮನ ದಿನಕ್ಕೊಂದು ಕವಿತೆ ವಿಜಯಲಕ್ಷ್ಮಿ ಕೊಟಗಿ ಮುಸ್ಸಂಜೆ ಹೊತ್ತಿನ್ಯಾಗ ದೀಗಿ ಮುಡಿಸಿ ಒಲೆಯೊಳ್ಗ ಬೆಂಕಿ ಹೊತ್ಸಿಕೈ ಚಾಚಾಳ ಅವ್ವ ಮೈ ಚಾಚಾಳಹಡ್ದು ಬ್ಯಾನಿ ಅಪ್ಪನ ಗ್ಯಾನಅದೆಲ್ಲಿ ಕುಡಿದು ಬಿದ್ದಾನೋ?ಗಳಿಗಳಿಗೀ ನಿಟ್ಟುಸಿರಿಗೆಬೂದ್ಯಾಗಿನ ಕೆಂಡ ನಿಗಿನಿಗಿಆಕಿ ಮನಸಿನ ತುಂಬಾ ದಟ್ಟ ಹೊಗಿ,ಬಡವ್ರಿಗೆ ಹೊಟ್ಟಿ ಯಾಕ ಕೊಟ್ಟಾನೋ ಶಿವ?ಹಸ್ದು ತೆಕ್ಕಿ ಬಡ್ದು ಅಳಾಮಕ್ಕಳ್ನ ರಮ್ಸಿಹೊಟ್ಟಿ ಸಂಕ್ಟಾನ ಹೊಟ್ಯಾಗ ಒತ್ತಿಮಜಾಕಟಾ ತೋರಿಸ್ತೀನಂತಸ್ವಾರಾಗ ನೀರು ತುಂಬಿಚಂದ್ರಮನ ಬಿಂಬ ತೋರಿಸಿದ್ರಯವ್ವಾ! ನೀರಿನ್ಯಾಗ ರೊಟ್ಟಿ ನಂದಿತಬೇಅಂತ ಆಸೆಗಣ್ಣಿಲೇ ನೋಡಕತ್ಯಾವುಕರುಳಿಗೆ ಕಳ್ಳಿ ಬಡ್ದುದೊಡ್ಡ ದೊಡ್ಡ ಗುಳ್ಳಿಯಾಗೆವುಹಿರೇಮಗಳು ಮೈನೆರ್ತಾಳಸಾಣದು ಮಲಿ ಜಗ್ಗತೈತಿನೆಲ ಹಾಸಿ ನೆಲ ಹೊಚ್ಚಿಮನ್ಸಿಗೆ ಮುಳ್ಳು ಬಡ್ದು ಸರವತ್ನಾಗಅವ್ವ ಕತ್ತಲ್ದಾಗ ಕರಗಿಹೋಗ್ಯಾಳಹಾವಿನ ಜತಿ ಆಟ ಆಡ್ಯಾಳಗೂಳಿಗೂಡ ಕುಸ್ತಿ ಹಿಡದಾಳಬೆಳಗಾಮುಂಜಾನಿ ಗೂಡು ಸೇರಿನೆಲಕ್ಕೊರಗಿ ಬೆನ್ನು ಹಚ್ಚಿದರೆಚೂರುಗಾಯ ನೋಡಿ ಮಗ್ಳು ಗಾಬರಾಗ್ಯಾಳಉಡಿಯ್ಯಾಗಿನ ಮಂಡಾಳ ಗಬಗಬಮುಕ್ಕೋ ಮಕ್ಕಳ್ನೋಡಿ ಕಣ್ಣೀರಿಟ್ಟಾಳಸವರಾಡೆದ್ದು ಸೆರಗಿನ ಚುಂಗು ಬಿಚ್ಚಿದ್ರ ಪುಡಿಗಾಸು ಗರತಿತನ್ದ ಕಿಮ್ಮತ್ತು!ನಕ್ಕೆ ನಕ್ಕಳು ಮಕ್ಕಳು ದಿಗಿಲು ಬಿದ್ದುಮಾರಿ ನೋಡಿದ್ವುಹೊರಗ ಉರಿದೇವ ಉಗುಳೋ ಬೆಂಕಿನನುಂಗಿ ನಿಂತ ಭೂಮ್ತಾಯಂಗನೋವು ನುಂಗಿದ ಅವ್ವ ತಣ್ಣಗ ಕಂಡ್ಲು. *********************************

ಅಮ್ಮನ ದಿನಕ್ಕೊಂದು ಕವಿತೆ Read Post »

ಕಾವ್ಯಯಾನ

ಅಮ್ಮ….

ಅಮ್ಮಂದಿರ ದಿನದ ವಿಶೇಷ ಕವಿತೆ ಅಕ್ಷತಾ ಜಗದೀಶ ನೋವಿನಲ್ಲು ನಗುವ ಚೆಲ್ಲುವವಳು..ತಾನು ಹಸಿದು ಕೈ ತುತ್ತು‌ ನೀಡುವವಳುಎಷ್ಟೇ ಕಷ್ಟಗಳಿದ್ದರು,ಎಷ್ಟೇ ದು:ಖವಿದ್ದರುತನ್ನ ಮಗುವಿಗಾಗಿ ಕೇವಲಸುಖವನ್ನೇ ಬಯಸಿದವಳು… ತನ್ನ ನೋವಿನ ದಿನಗಳನುತನ್ನಲ್ಲಿಯೇ ಕೊನೆಗಾಣಿಸಿತನ್ನ ಕರುಳಿನ ಕುಡಿಗಾಗಿಹೂವಿನ ಹಾಸಿಗೆ ನಿರ್ಮಿಸಿದವಳು..ಮುಳ್ಳುಗಳೇ ಕಾಲಿಗೆ ಚುಚ್ಚಿದರುಕಣ್ಣಿರ ಹನಿ ಮಗುವಿಗೆ ತಾಗದಂತೆಎಚ್ಚರಿಕೆ ವಹಿಸಿದವಳು.. ಮಗುವಿನ ಅಳುವಿನಲ್ಲಿ ತಾ ಅತ್ತಳುಕಂದನ ನಗುವಿನಲ್ಲಿ ತಾ ನಲಿಡಾಡಿದಳುಅಮ್ಮ ಎಂಬ ಒಂದು ನುಡಿಯ ಕೇಳಿತನ್ನೇಲ್ಲ ನೋವನ್ನು ಮರೆತಳು.. ವಿಶಾಲವಾದ ಕಡಲಿನ ಹಾಗೆ ಅಮ್ಮನಿನ್ನ ಮಮತೆ….ಅಮ್ಮ ಎಂಬ ಪದಕ್ಕೆ ಅಮ್ಮನೇ ಸಾಟಿನಮನ ನಿನ್ನ ಪಾದ ಕಮಲಗಳಿಗೆ ಕೋಟಿ.. ಕೋಟಿ.. -***

ಅಮ್ಮ…. Read Post »

ಕಾವ್ಯಯಾನ

ಕನಸ ಬಿತ್ತಿರಿ..

ಕವಿತೆ ಕನಸ ಬಿತ್ತಿರಿ.. ಚೈತ್ರ ತಿಪ್ಪೇಸ್ವಾಮಿ ಮಕ್ಕಳಲ್ಲಿ ರೈತನಾಗಬೇಕೆಂಬ ಕನಸ ಬಿತ್ತಿರಿ….ರೈತನಿಂದ ದೇಶದ ಪ್ರಗತಿ ಎಂದುಅಚ್ಚೊತ್ತಿರಿಆಧುನಿಕ ತಂತ್ರಜ್ಞಾನದ ಕೃಷಿ ಮಾಡಲು ಮಕ್ಕಳ ಪ್ರೇರೇಪಿಸಿರಿ…. ಇರುವ ಜಾಗದಲ್ಲಿ ಹೂವು ಹಣ್ಣು ಕಾಯಿ ಪಲ್ಯ ಬೆಳೆಯುವುದಾ ಕಲಿಸಿರಿ..ರಾಸಾಯನಿಕ ತ್ಯಜಿಸಿ ಸಾವಯವ ಬಳಸಿಮಾದರಿ ರೈತನಾಗಲು ಅವಕಾಶ ಕೊಡಿ.. ಬರಿ ಡಾಕ್ಟರ್ ಇಂಜಿನಿಯರ್ ಒತ್ತಾಯ ಬಿಡಿಕೃಷಿ ಕೈಗೊಳ್ಳಲು ಒತ್ತಾಸೆ ನೀಡಿಕೆಲಸಕ್ಕಾಗಿ ನಗರದ ವಲಸೆ ತಡೆಯಿರಿಇಲ್ಲೆ ಇದೆ ಕೃಷಿ ಕಾಯಕ ತೋರಿಸಿರಿ ಸೂಟು-ಬೂಟು ಕೊಟ್ಟರಷ್ಟೇ ಬದುಕೇ?ಪಂಚೆಯುಟ್ಟು ನೇಗಿಲು ಹಿಡಿದು ಉತ್ತಿ ಬಿತ್ತಿಬೆಳೆಯುವ ಸಂಸ್ಕೃತಿ ನಮ್ಮದಲ್ಲವೇ? ಪಬ್ಬು ಬಾರ್ ಮೋಜು-ಮಸ್ತಿಅನಾರೋಗ್ಯಕ್ಕೆ ದಾರಿಯಾದರೆಸುಗ್ಗಿಯೊಡನೆ ಹಿಗ್ಗಿ ನಲಿವಸಂಗೋಪನೆಯೇ ಆರೋಗ್ಯಕ್ಕೆ ದಾರಿಪೋಷಕರೇ ಮಕ್ಕಳಲ್ಲಿ ರೈತನಾಗಬೇಕೆಂಬ ಕನಸು ಬಿತ್ತಿರಿ.. **********

ಕನಸ ಬಿತ್ತಿರಿ.. Read Post »

ಕಾವ್ಯಯಾನ

ನಾನು ನಾನೆಂದು ಬೀಗಿ

ಕವಿತೆ ನಾನು ನಾನೆಂದು ಬೀಗಿ ಅಭಿಜ್ಞಾ ಪಿ ಎಮ್ ಗೌಡ ಎಲ್ಲೆಲ್ಲೂ ಚಿತಾಗಾರಸ್ಮಶಾನಗಳ ದರ್ಬಾರುಬಲುಜೋರು ಜೋರು.!ಬೀದಿ ಬೀದಿಗಳಲ್ಲಿಸಾಲುಸಾಲು ಶವಗಳ ದಿಬ್ಬಣಚಿತಾಭಸ್ಮದ ಕಾಯಕಲ್ಪಕೆಮುಖಮಾಡಿ ನಿಂತಿವೆ…. ವಿಧಿಯಿಲ್ಲದೆಮುಷ್ಕರ ಹೂಡಲುಹೆಣಗಳ ರಾಶಿಗಳುಸ್ಮಶಾನದವಿಳಾಸಕಾಗಿ ಅರ್ಜಿ ಹಾಕುತಿವೆ…ಅಹಿಂಸೆಯ ಅಹವಾಲುದೇವರ ಅವಗಾಹನೆಗೆಕೊಡಲು ತಾ ಮುಂದು ನಾ ಮುಂದೆಂದು… ಅವಕ್ಕಾದಭಂಡಗೇಡಿ ರಣಹದ್ದುಗಳುಬಾಯ್ಬಿಡದ ಗಿಡುಗಗಳ ಮಾಂತ್ರಿಕತೆಚಾಟಿ ಏಟಿನ ಮಾತಿಗೆಪುದುರುಗುಟ್ಟಿವಿಲವಿಲಗುಟ್ಟಿರಲು… ಒಡ್ದೋಲಗದಮಾರ್ಯಾದೆ ಹರಾಜಾಗುತಿದೆಸಣ್ಬುದ್ಧಿ ಸ್ವಾರ್ಥದೊಳುರಕ್ತ ಬೀಜಾಸುರರ ಸಾಮ್ರಾಜ್ಯಕಂಪಿಸುತಿದೆಎಂಟದೆಯ ಭಂಟನಂತಿರುವಭೂಪನಿಂದ… ರುಜುವಾತು ಮಾಡುತಿದೆಉಚ್ಛಿಷ್ಠಕಾಗಿ ಕೈಚಾಚಿದಪುಂಡತನದ ವಕೌಸಗಳ!ಆಸೆಬುರುಕಕೀಚಕಗಳನು ಚಂಡಾಡಿಹುರುಳಿಸಲು ಸಜ್ಞಾಗುತಿದೆ…. ನಾನು ನಾನೆಂದು ಮರೆದದುಷ್ಟ ನೀಚನಹಂಕಾರಮಣ್ಣುಮುಕ್ಕುತಿದೆ….ಗಹಗಹಿಸುತಿವೆ ಕಾಷ್ಠಗಳುಶಪಿಸುತಿದೆ ಧರಣಿ.!ವಹ್ನಿಯೊಂದಿಗೆ ಸಲಿಲವುಸಾಥು ಕೊಟ್ಟು ನಗುತಿರಲುಅವನಳಿವಿನಂಚು ಅವನಿಂದಲೆ……! ****************************************

ನಾನು ನಾನೆಂದು ಬೀಗಿ Read Post »

ಕಾವ್ಯಯಾನ

ವಿರಹ ವೇದನೆ

ನಿನ್ನ ಅಂತರಂಗದ ನುಡಿ ಕರೆಯುತಿದೆ ನನ್ನನು
ಮನದ ಮಾತಲಿ ಮೌನ ಹುದುಗಿಸಿ
ಏಕೆ? ಸತಾಯಿಸುತಿರುವೆ ಗೆಳತಿ ಬಂದು ಸಂತೈಸು
ನೀ ನಡೆವ ದಾರಿಯಲ್ಲಿ ಹೂಹಾಸಿ ಸ್ವಾಗತಿಸುವೆ//

ವಿರಹ ವೇದನೆ Read Post »

You cannot copy content of this page

Scroll to Top