ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಜಲ್

ಗಜಲ್ ಅಶೋಕ ಬಾಬು ಟೇಕಲ್. ನೀ ಮಾಡಿದ ಒಲವಿನ ಗಾಯ ಮಾಗಿಸಿತು ಈ ಮಧು ಬಟ್ಟಲುದೂರ ತೊರೆದ ಭಾವಗಳಿಗೆ ವಿದಾಯ ಹೇಳಿಸಿತು ಈ ಮಧು ಬಟ್ಟಲು ಕ್ಷಣ ಕ್ಷಣದ ರೋದನವನ್ನು ಸಂತೈಸಿ ಲಾಲಿಸಿ ಪಾಲಿಸಿದೆಪ್ರತಿ ದಿನವೂ ಮಮತೆಯ ಮಡಿಲಾಗಿ ಆರಾಧಿಸಿತು ಈ ಮಧು ಬಟ್ಟಲು ಬಾಂದಳದಿ ಕೆಂಪ್ಹರಡುವ ರವಿಯೂ ನಾಚಿ ನಿಬ್ಬೆರಗಾಗುತಿದ್ದಇಳಿಸಂಜೆಗೂ ರಮಿಸಿ ಅಭ್ಯಂಜನ ಮಾಡಿಸಿತು ಈ ಮಧು ಬಟ್ಟಲು ಸುಯ್ ಗುಡುವ ಗಾಳಿಯೂ ಸದ್ದಡಗಿ ಪಲ್ಲಂಗದಲಿ ಮಲಗಿದೆನಿನ್ನ ಭಾವ ಭಂಗಿಯ ಕ್ಷಣ ಹೊತ್ತು ಮರೆಸಿತು ಈ ಮಧು ಬಟ್ಟಲು ಜರಿವ ಜಗಕೂ ಅರಿವಿದೆ ಅಬಾಟೇ ನೊಂದ ಜೀವವೆಂದುಮೋಹದ ಮದರಂಗಿಯ ಶಪಿಸಿತು ಈ ಮಧು ಬಟ್ಟಲು ************************************

ಗಜಲ್ Read Post »

ಕಾವ್ಯಯಾನ

ಪಯಣ

ಕವಿತೆ ಪಯಣ ಅಕ್ಷತಾ‌ ಜಗದೀಶ ಕಾನನದ ಒಡಲಾಳದಲ್ಲಿ ಹುಟ್ಟಿಕಲ್ಲು ಮಣ್ಣುಗಳ ದಾಟಿಕೆಂಪಾಗಿ ತಂಪಾಗಿ…ಕೊನೆಗೆ ಎಲ್ಲರೂ ಬಯಸುವಜಲವಾಗಿ ಹರಿದು..ಸಾಗುವ ದಾರಿಯುದ್ದಕ್ಕೂಹೊಲ ಗದ್ದೆಗಳಿಗೆ ನೀರುಣಿಸಿಮನುಕುಲದ ಮನತಣಿಸಿಜಲಧಾರೆಯಾಗಿ ಧುಮುಕಿ..ಅಂಧಕಾರಕ್ಕೆ ಬೆಳಕಾಗಿಜೀವರಾಶಿಗೆ ಉಸಿರಾಗಿಭೂಮಿ ತಾಯಿಯ ಹಸಿರುಡುಗೆಯಾಗಿಹರಿವ ಓ ನದಿಯೇ…ಏನೆಂದು ಹೆಸರಿಸಲಿ ನಾ ನಿನಗೆಗಂಗೆ, ತುಂಗಾ,ಕಾವೇರಿ, ಶರಾವತಿಸ್ವಾರ್ಥವಿಲ್ಲದ ಓ ಜಲರಾಶಿಕೂಡುವಿರಿ ಆಳವಾದ ಸಾಗರಕೆಅಗಾಧ ಜಲರಾಶಿಯ ಮಿಲನಕೆ..ನಿಸ್ವಾರ್ಥದೊಂದಿಗೆ ಓ ತೊರೆಯೆನಿನ್ನ ಜನನ..ಸಾರ್ಥಕತೆಯೊಂದಿಗೆ ಸಾಗಿತುನದಿಯಾಗಿ ನಿನ್ನ ಪಯಣ…

ಪಯಣ Read Post »

ಕಾವ್ಯಯಾನ

ಜೋಡಿ ಹೃದಯಗಳು

ಕವಿತೆ ಜೋಡಿ ಹೃದಯಗಳು ತೇಜಾವತಿ ಹೆಚ್. ಡಿ. ಆದಿಯಿಂದ ಅಂತ್ಯದವರೆಗೂಎಂದೆಂದಿಗೂ ಸಂಧಿಸದಸಮನಾನಂತರ ರೇಖೆಗಳು ಅವು ಪರಸ್ಪರ ಜೋಡಿಜೀವಗಳಂತೆಜೀವಿಸುವವು ಅನಂತದವರೆಗೆ ಒಂದನ್ನಗಲಿ ಮತ್ತೊಂದುಅರೆಘಳಿಗೆಯೂ ಬಿಟ್ಟಿರದ ಬಂಧ ಹೆಗಲಿಗೆ ಹೆಗಲು ಕೊಟ್ಟು ಬದುಕ ರಥ ಎಳೆಯುವ ಜೋಡೆತ್ತುಗಳು ಅವು ಸಮಭಾರ ಹೊತ್ತು ಸಹಜೀವನ ನಡೆಸುವಸರಳ ರೇಖೆಗಳು ಸಾಗುವ ಪಥದಲ್ಲಿ ನೂರು ಅಪಘಾತ ಸಂಭವಿಸಿದರೂನಂಬಿಕೆಯ ಹೊರೆತುಮತ್ಯಾವ ಬೇಡಿಕೆಗಳನ್ನೂನಿರೀಕ್ಷಿಸದ ನಿಸ್ವಾರ್ಥ ಜೀವಗಳು ಬೇಕಂತಲೇ ತೂರಿಬರುವ ನೆರೆಗಳೆದುರುಕೇವಲ ಆತ್ಮಶಕ್ತಿಯಿಂದಲೇ ಎದುರು ಈಜುವ ನಕ್ಷತ್ರಮೀನುಗಳು ಗಟಾರದೊಳಗಿನ ರಾಡಿಯೆಲ್ಲಾ ಮೇಲೇರಿಶನಿ ಬೇತಾಳನಂತೆ ಹೆಗಲಿಗೇರಿದರುಮೈಡೊದವಿ ಚಿಮ್ಮವ ಸಿಹಿಬುಗ್ಗೆಗಳು..ಉಸಿರುಗಟ್ಟುವ ಕೊನೆಯ ಘಳಿಗೆಯಲ್ಲೂತುಟಿ ಎರಡಾಗದ ಸ್ಥಿರ ನಾಮಗಳು.. ಕಾರ್ಮೋಡಗಳ ನಡುವೆ ಬಿಳ್ಮಿಂಚು ಹುಡುಕುತ್ತಭೂರಮೆಯ ಮಡಿಲ ಸೇರಲು ತವಕಿಸುವ ಅಮೃತ ಬಿಂದುಗಳು.. ಕೋಟಿ ಕೋಟಿ ಅವಮಾನಗಳ ಕುಲುಮೆಯಲ್ಲಿ ಕುದ್ದು ಕುದ್ದು ಪರಿಶುದ್ಧ ಬದುಕು ಕಟ್ಟಿಕೊಂಡ ಮಿಸುನಿಗಳವು.. ಅಂದಿಗೂ ಇಂದಿಗೂ ಮೈದೋರದ ವ್ಯತ್ಯಾಸ..ಆತ್ಮಗಳ ಸ್ಪರ್ಶಸಲಾಗದ ಸವಾಲುಗಳೆದುರುಶಿಲೆಗಳ ಕಡೆದಷ್ಟು ಶ್ರೇಷ್ಠತೆಗೆ ಹೆಸರಾದ ಮೂರ್ತಿಗಳು.. ಅದೇ ಸೌಮ್ಯತೆ ಅದೇ ಮಂದಹಾಸಅದೇ ಕವಿಮನ ಅದೇ ಜೀವನ..ಕಡೆಮೊದಲಿಲ್ಲದ ಹಗಲುರಾತ್ರಿಗಳು ದೂರಕ್ಕೆ ಕಣ್ಣು ಹಾಯಿಸಿದಷ್ಟು ಒಂದುಗೂಡುವರೈಲು ಹಳಿಗಳು ಅವು..ನಿತ್ಯ ನಿರಂತರವಾಗಿ ಜೊತೆಯಲ್ಲೇ ಸಾಗುವವು ಸಮಭಾರ ಹೊತ್ತು ಸಹಕಾರ ನೀಡಲು… *************************************

ಜೋಡಿ ಹೃದಯಗಳು Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಅರುಣಾ ನರೇಂದ್ರ ಮತ್ತೇರಿಸುವ ಮಧು ಇಂದು ನೆತ್ತರಿನ ಬಣ್ಣವಾಯಿತೇಕೆತುಟಿ ಸೋಕುವ ಮುಂಚೆ ಬಟ್ಟಲು ಉರುಳಿ ಹೋಯಿತೇಕೆ ಹೃದಯ ಒಡೆದು ಚೂರಾದರಾಗಲಿ ಮಧುಶಾಲೆ ಕೈ ಮಾಡಿ ಕರೆದಿದೆತುಂಬಿ ತುಳುಕುವ ಹೂಜಿ ಎದುರಿಗಿದೆ ಮುಖದ ನಗು ಮಾಯವಾಯಿತೇಕೆ ಯಾರೇನೇ ಅಡಿಕೊಳ್ಳಲಿ ಬಿಡು ನೋವು ಮರೆಸುವ ಔಷಧಿ ಜೊತೆಗಿದೆ ಗಾಲಿಬ್ಸಾಕಿ ಸುರಿದು ಕೊಟ್ಟ ಸಂಜೀವಿನಿ ಕೈ ಸೇರುವ ಮುನ್ನ ನೆಲದ ಪಾಲಾಯಿತೇಕೆ ಎಲ್ಲರೂ ನನ್ನ ನೋಡಿ ದೂರ ಸರಿಯುತ್ತಾರೆ ಸಜನಿ ಎದೆಯ ಬೇನೆ ನಿನಗಷ್ಟೇ ಗೊತ್ತುದರ್ದಿಗೆ ಮುಲಾಮು ಸವರಿ ಕೈಗಿತ್ತ ತುತ್ತು ಬಾಯಿಗೆ ಬರದಾಯಿತೇಕೆ ಮಸೀದಿಯಲಿ ಮುಲ್ಲಾ ಅಜಾ ಕೊಟ್ಟಾಗಲೇ ಇವರಿಗೆ ಬೆಳಗಾಗುತ್ತದೆ ಅರುಣಾಮೈಖಾನಾದೊಳಗೆ ನಾನಿರುವಾಗ ಕತ್ತಲೆಯಲ್ಲೂ ಒಳಗೆ ಬೆಳಕಾಯಿತೇಕೆ ***************************************************

ಗಜಲ್ Read Post »

ಕಾವ್ಯಯಾನ

ಕೆಂಪು ತೋರಣ ಕಟ್ಟುತ್ತೇವೆ

ಕೆಂಪು ತೋರಣ ಕಟ್ಟುತ್ತೇವೆ ಅಲ್ಲಾಗಿರಿರಾಜ್ ಕನಕಗಿರಿ ಈಗ ನಾವುಕಿರು ದಾರಿಯಿಂದ ಹೆದ್ದಾರಿಗೆ ಬಂದಿದ್ದೇವೆ.ರಾಜಧಾನಿಯ ಸಾಹುಕಾರರ ಮನೆಯ,ಕುಂಡಲಿಯಲ್ಲಿ ಕೆಂಪು ಗುಲಾಬಿ ಬಾಡಿಹೋಗಿವೆಯಂತೆ.ಹೂ ಗಿಡದ ಬೇರಿಗೆ ರಕ್ತ ಕುಡಿಸಲು ಹೊರಟಿದ್ದೇವೆ. ಈಗ ನಾವುಊರು ಕೇರಿ ಧಿಕ್ಕರಿಸಿ ಬಂದಿದ್ದೇವೆ.ನಮ್ಮ ಅನ್ನ ಕಸಿದು ಧಣಿಗಳಾದವರ,ಮನೆಯ ತಲ ಬಾಗಿಲು ತೋರಣ ಒಣಗಿ ಹೋಗಿವೆಯಂತೆ.ನಮ್ಮ ತೊಡೆ ಚರ್ಮ ಸುಲಿದುಕೆಂಪು ತೋರಣ ಕಟ್ಟಲು ಹೊರಟಿದ್ದೇವೆ. ಈಗ ನಾವುಜೀವದ ಹಂಗು ತೊರೆದು ಬಂದಿದ್ದೇವೆ.‘ಮರಣವೇ ಮಹಾನವಮಿಯೆಂದು’ದಿಲ್ಲಿ ಗಡಿ ಮುಚ್ಚಿಕೊಂಡವರ ಮನೆ ಮುಂದೆನಮ್ಮ ಹೋರಾಟದ ಹಾಡು ಬರೆಯಲು,ಕಳ್ಳು ಬಳ್ಳಿ ಕಟ್ಟಿಕೊಂಡು ಹೊರಟಿದ್ದೇವೆ. ನೇಗಿಲೆಂಬ ಶಿಲುಬೆ ಹೊತ್ತುಕೊಂಡು.ಕಿರು ದಾರಿಯಿಂದ ಹೆದ್ದಾರಿಗೆ ಬಂದಿದ್ದೇವೆ ನಾವು. **************************************

ಕೆಂಪು ತೋರಣ ಕಟ್ಟುತ್ತೇವೆ Read Post »

ಕಾವ್ಯಯಾನ

ಶವ ಬಾರದಿರಲಿ ಮನೆ ತನಕ

ಕವಿತೆ ಶವ ಬಾರದಿರಲಿ ಮನೆ ತನಕ ಎ. ಎಸ್. ಮಕಾನದಾರ ನಿನ್ನ ಮನೆಯ ಅಂಗಳ ತನಕವೂನನ್ನ ಶವದ ಡೋಲಿ ಬಾರದಿರಲಿ ಹೂವಿನ ಚದ್ದರಿನ ತುಂಬಾ ಗುಲಾಬಿ ಅಂಟಿಸಿತರಾವರಿ ಜರದ ರೀಲು ಸುತ್ತಿ ಮೇಲಷ್ಟು ಇತ್ತರ್ ಸುರಿಯದಿರಲಿ ಆತ್ಮ ಸಾಕ್ಷಿ ನ್ಯಾಯಾಲಯಕೆಶರಣಾಗಿದ್ದೇನೆ. ಶಿಕ್ಷೆಗೆ ಗುರಿಯಾಗಿದ್ದೇನೆ ಅವಳಿಗೆ ಪ್ರೀತಿಸಿದ್ದು ನನ್ನ ತಪ್ಪಾದರೆನನ್ನನ್ನೂ ಪ್ರೀತಿಸಿದ ಅವಳ ತುರುಬು ತುಂಬಾ ಹೂ ಆರಡಿ ಜಾಗೆ ಮೂರು ಹಿಡಿ ಮಣ್ಣಿಗಾಗಿಕಾಲುಗೆರೆ ಸವೆದಿವೆ ಮೊಣಕಾಲು ಚಿಪ್ಪು ಒಡೆದಿದೆವಚನ ಭ್ರಷ್ಟನಲ್ಲ. ದೇಶ ಭ್ರಷ್ಟನೂ ಅಲ್ಲದಅವಳ ನಲ್ಲನಿಗೆ ಪುಟ ಗಟ್ಟಲೆ ತೀರ್ಪು ಬರೆದಿದ್ದು ಸರಿಯೇ ಕಾಮಾಲೆ ಮೆದುಳು ಹಳದಿ ಕಣ್ಣಿನ ಪಕೀರಕೀವು ಹೃದಯಾಕೂ ಅಫಿಡವಿಟ್ ಹಾಕಿದ್ದಾನೆ ಪ್ರತಿ ಹುಸಿ ಮಾತಿಗೂಕವಿತೆಯ ಮುಟ್ಟು ನಿಲ್ಲುತಿದೆ ನಾಳೆ ಬರುವ ಕರುಳಿನ ಕುಡಿಗೆಅಪ್ಪನ ಕವಿತೆ ತೋರಿಸಿ ತುತ್ತು ಉಣಿಸದಿರು ನಂಜಿಲ್ಲದ ಪದಗಳಿಗೆ ಬಾಣಂತಿ ಬೇರು ಕಟ್ಟದಿರು **********************************

ಶವ ಬಾರದಿರಲಿ ಮನೆ ತನಕ Read Post »

ಕಾವ್ಯಯಾನ

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ ಹೃದಯ ಕಣ್ಣೀರು ಕೊನೆ:ಹೃದಯವು ನಿಂತಿತುದುಃಖದ ಭಾರ. ಮನಸ್ಸು ಮನಸೇ ಜೋಕೆಕದ್ದಾರು ಆತ್ಮವನುಪ್ರೀತಿ ಹೆಸರು. ಅಮ್ಮ ತೊಗಲು ಬೊಂಬೆ :ಜೀವ ಕೊಟ್ಟ ದೇವತೆಅಮ್ಮನು ತಾನೇ. ಲಜ್ಜೆ ಸಂಜೆ ಕಡಲುಬಾನು ಭೂಮಿ ಮಿಲನಲಜ್ಜೆಯ ಕೆಂಪು. ಮೌನ ಮಾತು ಮೌನಕ್ಕೆಸೋತು ಶರಣಾಯಿತುಕಣ್ಣ ಭಾಷೆಲಿ. ಶಿಲೆ ಶಿಲೆಗೂ ಪ್ರೀತಿಸುರಿಯೋ ಸೋನೆಯಲಿಕರಗೋ ಮನ ಜಾತ್ರೆ ಮಾಯೆಯ ಜಾತ್ರೆಯಾರು ಯಾವ ಪಾಲಿಗೆಸಿಕ್ಕಿದ್ದೇ ಸಿರಿ. ಬಾಳು ಬಾಳ ಹಾದಿಲಿಮುಳ್ಳು ಕೂಡಾ ಹೂವಂತೆತೃಪ್ತಿ ಮನಕೆ. ಹೂವು ಮುಳ್ಳಿನ ಭಾಸಹೂಗಳು ಚುಚ್ಚಿದಾಗಪ್ರೀತಿಯೇ ಹೀಗೆ. ಕವಿ ಕವಿ ಕನಸುಕಂಡದೆಲ್ಲ ಕವಿತೆಮೊಗ್ಗು ಅರಳಿ. ********************************

ಹಾಯ್ಕುಗಳು Read Post »

ಕಾವ್ಯಯಾನ

ಕಾಡುವ ಕನಸುಗಳು

ಕವಿತೆ ಕಾಡುವ ಕನಸುಗಳು ರಶ್ಮಿ ಹೆಗಡೆ ಒಮ್ಮೊಮ್ಮೆ ಕಾಡುವ ರಂಗುರಂಗಾದ ಕನಸುಗಳುಬಣ್ಣದಲ್ಲಿ ಮಿಂದ ಮುಸ್ಸಂಜೆಯ ರವಿಯಂತೆಕಣ್ಣಿಗೆ ಇನ್ನೇನು ಚಂದ ಎನ್ನುವಷ್ಟರಲ್ಲಿಮುಳುಗಿ ಮಂಗಮಾಯವಾಗುವುದೇಕೆ? ಯಾರಿಂದಲೋ ಬಾಡಿಗೆ ತಂದ ಭಾವನೆಗಳಲ್ಲಅವೆಲ್ಲವೂ ನನ್ನ ನೆನಪಿನ ಗರ್ಭದಲ್ಲಿಯೇ ಅಡಗಿಬೆಚ್ಚಗೆ ಕುಳಿತು ಸಮಯ ಮೀರಿದ ಮೇಲೆಎದೆಯ ಗೂಡಿನಿಂದ ಹೊರಬಂದವುಗಳೇ! ರೆಕ್ಕೆ ಬಿಚ್ಚಿ ಸ್ವಚ್ಛಂದವಾಗಿ ಹಾರಬೇಕಾದಆ ನೆನಪಿನ ಪಕ್ಷಿಗಳು ಇಂದು ಮತ್ತೆಮನದ ಪಂಜರದಲ್ಲೇ ಬಂಧಿಯಾಗಿವೆಅದಕ್ಕೆ ಸ್ವಾತಂತ್ರ್ಯ ಸಿಗಬೇಕಾದ್ದು ನನ್ನಿಂದಲೇ! ಶಿಥಿಲಗೊಂಡ ಭಾವಸೇತುವೆಯಲ್ಲಿಇಂದು ಹರೆಯವೂ ಇಲ್ಲ,ಹುಮ್ಮಸ್ಸೂ ಇಲ್ಲಎಂದೋ ಆಗಾಗ ನೆನಪ ಮಳೆ ಸುರಿದಾಗಎದೆಯಡಿಗೆ ನೀರು ಉಕ್ಕಿ ಹರಿವುದನು ಕಾಣುತ್ತೇನೆ ಈ ನೆನಪುಗಳೇ ಹೀಗೆ,ಕಾಡುತ್ತವೆ,ಬೇಡುತ್ತವೆಕೊನೆಗೆ ಅಸಹಾಯಕತನದಿಂದ ಮಿಡಿಯುತ್ತವೆಮರಳುಗಾಡಿನ ಮರೀಚಿಕೆಯಂತೆಆಸೆ ತೋರಿಸಿ ಕಡೆಗೊಮ್ಮೆ ಮರೆಯಾಗುತ್ತವೆ! ******************************

ಕಾಡುವ ಕನಸುಗಳು Read Post »

ಕಾವ್ಯಯಾನ

ಹೊಸ ಬಾಳಿಗೆ

ಕವಿತೆ ಹೊಸ ಬಾಳಿಗೆ ಶ್ವೇತಾ ಎಂ.ಯು.ಮಂಡ್ಯ ಹಳತು ಕಳೆದುಹೊಸ ವರ್ಷ ಮರಳಿಎಲ್ಲಿಂದಲೋ ಬಂದುಮತ್ತೆಲಿಗೋ ಸಾಗೋಈ ಬದುಕ ಹಾದಿಯಲಿಹೊಸ ಭರವಸೆಯ ಚಿಗುರಿಸಲಿ ರಾಗಯೋಗ ಪ್ರೇಮಸೌಂದರ್ಯಮೇಳೈಸಿ ಭೂರಮೆಯ ಸಿಂಗಾರಗೊಳಿಸಿರೆಂಬೆಕೊಂಬೆಗಳು ತೂಗಿ ಬಾಗಿನರುಗಂಪು ತಣ್ಣನೆಯ ಗಾಳಿ ಸೂಸಿಆನಂದವನೆ ಹಂಚಿವೆ ಈ ಹರುಷವು ಹೀಗೆ ಉಳಿಯಲಿಖಂಡ ಖಂಡಗಳ ದಾಟಿಅರೆಗೋಡೆ ಮಹಾಗೋಡೆಅರೆತಡಿಕೆ ಮಹಾಮನೆಗಳೊಳಗಿನರೋಗಗ್ರಸ್ತ ಮನಸುಗಳಲಿಸೊರಗದ ಸಂಜೀವಿನಿಯಾಗಲಿ ಮೈಮುದುಡಿ ಚಳಿಯೊಳಗೆಬಿಟ್ಟುಬಿಡದೆ ಕಾಡುವ ಶಾಪಗ್ರಸ್ತ ದಾರಿದ್ರಕ್ಕೆ ಬಲಿಯಾದ ಜೀವಗಳಿಗೆಬೇಡುವ ಕೈಗಳಿಗೆ ನೀಡುವಶಕ್ತಿಯ ನೀ ಇಂದಾದರುಹೊತ್ತು ತಾ ಹೊಸ ವರುಷವೇ ಬದುಕನ್ನೇ ಹಿಂಡಿದ ಕಾಣದ ಮುಖವುಕಾಣದೆ ಹೋಗಲಿ ಹಾಗೆಯೇಈ ಲೋಕದೊಳಗಿಂದ ಆಚೆಗೆಹೊಸ ಮುನ್ನುಡಿಹೊಸ ಕನ್ನಡಿಹೊಸ‌ಬಾಳಿನ ನಾಳೆಗೆ **************************

ಹೊಸ ಬಾಳಿಗೆ Read Post »

ಕಾವ್ಯಯಾನ

ಸಹಜ ಪ್ರೇಮ

ಕವಿತೆ ಸಹಜ ಪ್ರೇಮ ದೇವರಾಜ್ ಹುಣಸಿಕಟ್ಟಿ. ಅವಳದು ನನ್ನದು ಅಮರಪ್ರೇಮ ಅಲ್ಲವೇ ಅಲ್ಲ..ಕಾರಣ ಅವಳಿಗಾಗಿ ನಾನುಗೋರಿ ಕಟ್ಟಲಿಲ್ಲ..ವಿಷ ಉಣಿಸಲಿಲ್ಲ ಉಣ್ಣಲಿಲ್ಲ..ಇನ್ನು ಗೋಡೆ ಕಟ್ಟುವಬಾದಶಾಗಳು ಇರಲೇ ಇಲ್ಲಾ… ತಿಂಗಳಿಗೊಮ್ಮೆ ಅವಳಹೆಜ್ಜೆಗಳು ಭಾರವಾಗುತ್ತವೆ..ಆಗೆಲ್ಲ ಮನೆಯ ತುಂಬಾನನ್ನದೇ ಕಾರುಬಾರು..ಉಪ್ಪು ಹುಳಿ ಹೆಚ್ಚು ಕಡಿಮೆಆಗಿರುವ ಅನ್ನ ಸಾಂಬಾರು…ನನ್ನಂತಲ್ಲ ಅವಳು ಉಂಡು ಬಿಡುತ್ತಾಳೆತುಟಿಪಿಟಕ್ ಅನ್ನದೇ ಬಿಡದೇ ಚೂರು… ಮುನಿಸು ಬರುತ್ತೆ ಆಗಾಗ ಸಂತೆಯಲ್ಲಿಜೊತೆಯಾದ ಅಪರಿಚಿತ ಗೆಳೆಯನಂತೆಕಾರಣ ತುಸು ಹೊತ್ತಾಗಿ ರಾತ್ರಿ ಬಾರಿಂದ ಮರಳಿದ್ದು..ತುಸು ನಶೆ ಹೆಚ್ಚಾಗಿ ಪೆಚ್ಚುಪೆಚ್ಚಾಗಿ ಮಾತನಾಡಿದ್ದು..ತುಸು ಸಿಗರೇಟಿನ ಹೋಗೆಹೆಚ್ಚಾಗಿ ಉಸಿರಿದ್ದು….ಇದು ಹೆಚ್ಚೊತ್ತು ಇರದುಮತ್ತೆ ಅಪರಿಚಿತ ಗೆಳೆಯನಂತೆಯೇ ಕಾಣೆಯಾಗಿ ಬಿಡುತ್ತೆ ಸದ್ದಿಲ್ಲದಂತೆ… ಇರುಳು ಕಳೆದು ಹಗಲು ಹೊರಳುವಮುನ್ನ ಕರಗಿ ಮಂಜಿನಹನಿಯಂತೆ..ಮುಡಿಗೆ ಏರಿದ ಹಿಡಿ ಮಲ್ಲಿಗೆ…ಇಲ್ಲಾ ಒಂದ್ ಸಣ್ಣ ಬಿಗಿ ಅಪ್ಪುಗೆಸಾಕಿಷ್ಟೇ ಕಾರಣ ಅದಕೆ…ಅವಳು ಹೂವಾಗುತ್ತಾಳೆ ನಾನುದುಂಬಿ ಹೆಚ್ಚೇನು ಹೇಳಲಿ…ನಮ್ಮದು ಅಮರ ಪ್ರೇಮವಲ್ಲ..ಪ್ರೀತಿಯನೇ ಉಸಿರಾಡುವಂತೆಮಾಡಿದ್ದೇವೆ ಅಷ್ಟೇ…ಇಂಚಿಂಚು ತುಂಬಿದ್ದೇವೆ ಒಳಗೂ ಹೊರಗೂ ನಿಷ್ಠೆಯಿಂದ ಇಷ್ಟಿಷ್ಟೇ…ಹೊರಗೆ ಹೋಗಿ ಬರುವಾಗಲೆಲ್ಲ ಅವಳ ಕಂಗಳಲ್ಲಿಯ ಕಾಂತಿಯನ್ನೆ ಕನ್ನಡಿಯಾಗಿಸಿಕೊಂಡವ ನಾನುನನ್ನ ಮುಖಾರವಿಂದವನ್ನೇ ಮನೆಯ ಹೊಸ್ತಿಲ ಬೆಳೆದಿಂಗಳಾಗಿಸಿಕೊಂಡವಳು ಅವಳು..ಜೀವನದ ಸಂತೆಯಲಿ..ದಿನಗಳು ಸರಿದಿವೆ ಸದ್ದಿಲ್ಲದೆ ಮಗ್ಗುಲಲಿ…ಮತ್ತೆ ಹೇಳುತ್ತೇನೆ ನಮ್ಮದು ಅಮರ ಪ್ರೇಮವಲ್ಲ ಬಿಡಿ…ಒಂದಿಷ್ಟು ಪ್ರೀತಿ ಉಸಿರಿದ್ದೇವೆ ಹಗಲಿರುಳಿಡಿ… ನೆನಪಿದೆ ನನಗೆ ಮೊನ್ನೆ-ಮೊನ್ನೆ ಎನ್ನುವಹಾಗೆಆಗಸದ ಚಂದಿರನ ತಂದು ತೊಟ್ಟಿಲಲಿ ಇಟ್ಟಿದ್ದಾಳೆ…ನಕ್ಷತ್ರತಾರೆಗಳ ತೋರಿಸಿ ಉಣಿಸಿದ್ದಾಳೆ…ವಿಶ್ವ ವಿದ್ಯಾಲಯಗಳ ಮೀರಿದತಂದೆ ಎಂಬ ಪದವಿ ತಂದುನಿರಾಯಾಸವಾಗಿ ಮುಡಿಗೆರಿಸಿದ್ದಾಳೆ..ಅದಕ್ಕೆ ಅವಳು ವಿಶ್ವ ವಿದ್ಯಾಲಯನಾನು ನಿಷ್ಠೆಯ ವಿದ್ಯಾರ್ಥಿ…ಈಗಲೂ ಹೇಳುತ್ತೇನೆ ನಮ್ಮದುಅಮರ ಪ್ರೇಮ ಅಲ್ಲವೇ ಅಲ್ಲ….ಸಹಜ ಪ್ರೇಮ ಅಷ್ಟೇ..ನಾನು ಅವಳು ಬೆರೆತಿದ್ದೇವೆಎಷ್ಟೆಂದು ಗೊತ್ತೇ?ಹೆಚ್ಚೇನು ಅಲ್ಲ ಬರೀ ಒಂದಿಷ್ಟುಇಳಿ ಸಂಜೆಯಲಿಹಗಲು- ಇರುಳು ಬೆರೆತಂತೆ.. !!!ಕಣ್ಣು ರೆಪ್ಪೆಯನಗಲಿ ಇರದಂತೆ… !!!ಅಷ್ಟೇ ನಮ್ಮದು ಅಮರ ಪ್ರೇಮ ಅಲ್ಲವೇ ಅಲ್ಲ…ಪ್ರೀತಿಯನೆ ಉಸಿರಾಡಿದ್ದೇವೆ ಇಷ್ಟಿಷ್ಟೇ… ***************************

ಸಹಜ ಪ್ರೇಮ Read Post »

You cannot copy content of this page

Scroll to Top