ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಸಂಕ್ರಾಂತಿ ಕಾವ್ಯ ಸುಗ್ಗಿ ಹುಡುಕಾಟ ಮಾಲತಿ ಶಶಿಧರ್ ನಾವು ಬಂದದ್ದಾರೂ ಯಾವಾಗ?ಹುಡುಗಿಯರ ಜಡೆ ಎಳೆದುಬೈಯಿಸಿಕೊಳ್ಳುತ್ತಿದ್ದ ತರಗತಿಯಿಂದ ಇಲ್ಲಿಗೆಮಿಸ್ಸಿನ ಬೆನ್ನಿಗೆ ರಾಕೆಟ್ ಬಿಟ್ಟುಕಿವಿ ಹಿಂಡಿಸಿಕೊಂಡ ಕಾರಿಡಾರ್ನಿಂದ ಇಲ್ಲಿಗೆ.. ನಾವು ಮರೆತದ್ದಾದರೂ ಯಾವಾಗ?ಉಗುರುಗಳ ಮೇಲೆ ಬಿಳಿ ಚುಕ್ಕಿ ಇಟ್ಟುಪುರ್ರೆಂದು ಹಾರಿ ಹೋಗುತ್ತಿದ್ದ ಬೆಳ್ಳಕ್ಕಿಗಳಹಿಡಿದು ಬೆಂಕಿಪೊಟ್ಟಣದಲಿ ಬಂಧಿಸುತ್ತಿದ್ದಮಿಂಚುಹುಳಗಳ ನಾವು ಬೆಳೆದದ್ದಾದರೂ ಯಾವಾಗ?ನಮ್ಮ ಕನಸುಗಳು ಚಿಕ್ಕದಾಗಲು ಬಿಡುತ್ತಾಮನಸುಗಳಿಗೆ ಮಾತಿನಲೇ ಬೆಂಕಿ ಇಡುತ್ತಾ ಒಂದೇ ಒಂದು ಬಾರಿ ಹತ್ತಾರು ವರ್ಷ ಹಳೆಯಕ್ಯಾಲೆಂಡರ್ ತೆಗೆದುಬಾಲ್ಯದಾಟವನ್ನೇ ಆಡದ ದಿನಾಂಕದ ಮೇಲೆಬೆರಳಿಡುವ ಆಟವಾಡೋಣವೇ??ಹೊಚ್ಚ ಹೊಸ ಕ್ಯಾಲೆಂಡರ್ ತೆಗೆದುಮನಸ್ಸು ಬಿಚ್ಚಿ ನಕ್ಕ ದಿನವಹುಡುಕುವ ಆಟವಾಡೋಣವೇ?? ***************************************

Read Post »

ಕಾವ್ಯಯಾನ, ಗಝಲ್

ಕಾಫಿಯಾನ ಗಝಲ್

ಕಾಫಿಯಾನ ಗಝಲ್ ಜಬೀವುಲ್ಲಾ ಎಂ. ಅಸದ್ ಇರುಳಲ್ಲಿ ಹಚ್ಚಿಟ್ಟ ದೀಪಗಳ ಬೆಳಗು ಹಗಲಲ್ಲಿ ಮಾಯವಾಗಿದೆಹೃದಯದಲ್ಲಿ ಹುದುಗಿದ್ದ ಪ್ರೇಮದ ಬೀಜ ಈಗ ಮೊಳಕೆಯಾಗಿದೆ ಕಾಣದ ಭರವಸೆಯ ಕರಪಿಡಿದು ನಡೆದಿರುವೆ ಸುಮ್ಮನೆ ಎಲ್ಲಿಗೋನೆನಪಿನಾಗಸ ಗುಡುಗಿ ಧೋಗುಟ್ಟಿ ಸುರಿದು ಮನಸ್ಸು ಹಸಿಯಾಗಿದೆ ಹೃದಯದ ಹಾದಿಯಲ್ಲಿದೆ ನಿನ್ನ ಹೆಜ್ಜೆ ಗುರುತುಗಳ ಕಾಡುವ ಸದ್ದುಮದ್ದಿಲ್ಲದ ಮನದ ನೋವಿಗೆ ಕಣ್ಣ ಕಂಬನಿ ಸಾಂತ್ವನವಾಗಿದೆ ನಶ್ವರದ ಬಾಳಿದು ಸಾರ್ಥಕವಾಗಿಸಬೇಕು ಶಾಶ್ವತೆಯ ಅರಸದಿರುಮುಂಜಾವಿಗೆ ಅರಳಿ ಘಮಘಮಿಸಿದ ಸುಮ ಸಂಜೆಗೆ ಸಾವಾಗಿದೆ ಕಾಣದ ಕಿಚ್ಚು ಹುಚ್ಚೆದ್ದು ಹಬ್ಬಿ ಸುಡುತ್ತಿಹುದು ಸಂಬಂಧಗಳನ್ನುಒಡಲ ಕಾವು ಜೀವದ ಹಾಡಾಗಿ ಕಲ್ಲು ಕರಗುವ ಸಮಯವಾಗಿದೆ ಚಿಗುರುವ ಲತೆಗೆ ಬಳಸಿ ಹಬ್ಬಲು ಮರವೊಂದು ಅಸರೆ ಬೇಕಿದೆಯಮುನಲೆಗಳ ಮೇಲೆ ನಾವೆಯೊಂದು ತೇಲುವ ಶವವಾಗಿದೆ ನನ್ನ ನಿನ್ನ ನಡುವಿನ ಮೌನ ಅಲಾಪಗೊಂಡು ಕಡಲಾಗಿ ಮೊರೆಯುತ್ತಿದೆಅಸದ್ ಹೆಪ್ಪುಗಟ್ಟಿದ ನೋವು ತಾಜ್ ಮಹಾಲಿನ ದಟ್ಟ ನೆರಳಾಗಿದೆ

ಕಾಫಿಯಾನ ಗಝಲ್ Read Post »

ಕಾವ್ಯಯಾನ

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1) ರವಿ ಹೇಮಂತ ಋತುಬೆಳಗೋ ರವಿ ಕೂಡಾಮೈಗಳ್ಳನಾದ. 2) ಚಂದ್ರ ಬಾನಿಗೆ ಬಣ್ಣ :ತಾರೆಯ ಕೆನ್ನೆಯದು,ಚಂದ್ರ ನಕ್ಕಾಗ. 3) ಇಬ್ಬನಿ ಹೂವಿನ ನಗು :ಮತ್ತೇರಿತು ಸೂರ್ಯಗೆ,ಇಬ್ಬನಿ ಮುತ್ತು. 4) ಲಾಲಿ ತೊಟ್ಟಿಲು ಕಟ್ಟಿ :ಬಾನಿಗೆ, ಲಾಲಿಹಾಡು,ಹಕ್ಕಿ ಹೇಳಿದೆ. 5) ಸ್ವಪ್ನ ಸೋಲದೆ ಉಂಟೆ :ಜೋಗುಳಕೆ, ನಿದ್ದೆಗೆಸ್ವಪ್ನ ಜಾರಿತು

ಹಾಯ್ಕುಗಳು Read Post »

ಕಾವ್ಯಯಾನ

ಪುಟತಿರುಗಿಸುವ ಮುನ್ನ

ಕವಿತೆ ಪುಟತಿರುಗಿಸುವ ಮುನ್ನ ನೂತನದೋಶೆಟ್ಟಿ ಅವನಿಗೆ ಗೊತ್ತುಇದುಕೊನೆಯಿರದ ನಾಳೆಯೆಂದುದಿನವೂ ಓಕುಳಿಯಾಡುತ್ತ ಬರುತ್ತಾನೆಕಾಮನಬಿಲ್ಲನ್ನು ಗುರುತಿಗಿರಿಸಿ ತೆರಳುತ್ತಾನೆಎಂದಾದರೂ ಒಂಟಿಯಾಗಿಸುತ್ತಾನೆಯೇ? ಚಂದ್ರತಾರೆಯರನ್ನು ಕಳಿಸುತ್ತಾನೆಕತ್ತಲೆಗೆ ಹೊಳಪ ತುಂಬಲುಕಾಯಿಸುತ್ತಾನೆ ಪ್ರೇಮಿಯಂತೆವಿರಹವಿರದ ಬಂಧುರದಿಂದ ಗಿಡ, ಮರ, ಹಕ್ಕಿಗಳಿಂದ ಕಲಿಸುತ್ತಾನೆನಲಿವು, ನೋವು, ಹಸಿವು, ನಿದ್ದೆಪ್ರೇಮ, ಸ್ನೇಹಎಂಥ ಮಾಯಗಾರನೋ ನೀನುಏನು ಕನಸುಗಾರ ! ಕಳೆದ ದಿನಗಳ ನೆನಪಿಸದೆಪಡೆಯಲುಕನವರಿಸದೆಕೊಡುವ ನಿರಂತರತೆಯಲ್ಲಿಧನ್ಯನಾಗುತ್ತೀಯಲ್ಲ ! ನಾವು ಕಲಿತದ್ದಾದರೂ ಏನು!ದಿನಗಳ ಲೆಕ್ಕ,ಕೊಡುವ ಕೊಂಬ ಸಂಚು !ವರುಷ ವರುಷಗಳ ಹಪಹಪಿ ಮತ್ತೆ ನಾಳೆ ಬಂದೇ ಬರುತ್ತಾನೆಅದೇ ಬೆಳಕು, ಬಣ್ಣ, ಅಂದ ಹೊಸತೆಂಬ ಪರದೆಯನ್ನುಕಣ್ಣಿಗಂಟಿಸಿಕೊಂಡುನೋಡುವ ನಾವುಪುಟತಿರುಗಿಸುತ್ತೇವೆಭ್ರಮೆಯಲ್ಲಿ. ————————-

ಪುಟತಿರುಗಿಸುವ ಮುನ್ನ Read Post »

ಕಾವ್ಯಯಾನ

ಅಂದಿಗೂ- ಇಂದಿಗೂ

ಕವಿತೆ ಅಂದಿಗೂ- ಇಂದಿಗೂ ನಾಗರೇಖಾ ಗಾಂವಕರ ನಾನು ಹುಟ್ಟಿದಾಗ ಇದೆಲ್ಲ ಇರಲೇ ಇಲ್ಲ,ಬಣ್ಣಬಣ್ಣದ ಅಂಗಿ ತೊಟ್ಟು,ಕೇಕು ಚಾಕಲೇಟುಗಳ ಹಂಚಿರಲೇ ಇಲ್ಲ. ಅಡಿಯಿಡಲು ಕಲಿತಂತೆ ಕೋಳ್ಗಂಬಕ್ಕೆ ಕಟ್ಟಿದಕಾಲಕುಣಿಕೆ ಬಿಚ್ಚಿ ಹೊರಗಡಿಯಿಟ್ಟಾಗಚೂಪುಕಲ್ಲೊಂದು ಕಾಲ ಬಗೆದಾಗಕಲ್ಲಿಗೆ ಎರಡೇಟು ಬಿಗಿದುಮತ್ತೆ ನಡೆದಾಗ ನನಗೆಭಯವಾಗಿರಲಿಲ್ಲ, ನೋವೂ.. ಅಮ್ಮನ ಕೈ ತೊಟ್ಟಿಲತೂಗಲೇ ಇಲ್ಲ.ಜೋಗುಳವ ಅವಳಿಗೆಂದೂಹಾಡಲಾಗಲೇ ಇಲ್ಲ,ಹಗಳಿರುಳು ದುಡಿದ ಮೈ ಹಾಸಿಗೆಕಂಡಾಗ ಬಿದ್ದದ್ದು, ಮರುದಿನ ಎದ್ದದ್ದು,ಮತ್ತೆ ಬಗಲಿಗೇರಿದ್ದು,ಅದೇ ಹರಕು ಬುಟ್ಟಿ, ಅದರಲ್ಲೆರಡು ರೊಟ್ಟಿತುತ್ತಿನ ಚೀಲ ತುಂಬಬೇಕಿತ್ತಲ್ಲಮತ್ತೆ ಗದ್ದೆ ಹಾಳೆಯ ಮೇಲೆ ಕಟ್ಟಿಟ್ಟಹುಲ್ಲಿನ ಹೊರೆ ಅವಳಿಗಾಗೇಕಾದಿರುತ್ತಿತ್ತಲ್ಲ,ಆದರವಳ ಪ್ರೀತಿಯ ಬೆಚ್ಚನೆಯ ನೆರಳುಸದಾ ನನ್ನ ತಡುವುತ್ತಲೇ ಇತ್ತಲ್ಲಾ.. ನಾ ದೊಡ್ಡವಳಾದಾಗ, ಎದೆ ಮೂಡಿ ನಕ್ಕಾಗಕೆನೆಮೊಸರು, ಬೆಲ್ಲ ಕೊಬ್ಬರಿ ಸಿಕ್ಕಲೇ ಇಲ್ಲ,ಕಣ್ಣು ಕಿಸಿದು ನೋಡುವ ಗಂಡುಗಳುನಮ್ಮ ಸುತ್ತಲೂ ಇರಲೇಇಲ್ಲ.ಅಣ್ಣಂದಿರು ಮಾವಂದಿರು ಎಂದೂಬಂಧಕ್ಕೆ ಹೊರತಾಗಿ ನಡೆದುಕೊಳ್ಳಲೇ ಇಲ್ಲ.ಪ್ರೀತಿಯ ಹಂಚುವುದರಲ್ಲಿಜಿಪುಣತೆ ಇರಲಿಲ್ಲ. ಗದ್ದೆ ಕೆಲಸದ ಹೆಣ್ಣಾಳುಮೇಲುದರಿ ಬಿಚ್ಚಿ ಸೊಂಟಕ್ಕೆ ಸುತ್ತಿ,ಮೀನಖಂಡದವರೆಗೂ ಸೀರೆ ಎತ್ತಿ ದುಡಿವಾಗಅವಳಂದವ ಯಾರೂ ಕದ್ದುನೋಡುತ್ತಿರಲಿಲ್ಲ ಕಾಣಬಾರದ್ದಕಾಣುವ ಕಣ್ಣುಗಳು ಇರಲೇ ಇಲ್ಲ. ಇಂದಿಗೆ ….ಹೀಗೆಲ್ಲ ಇತ್ತೆಂದರೆ ನಂಬಲಾಗುವುದೇ ಇಲ್ಲ

ಅಂದಿಗೂ- ಇಂದಿಗೂ Read Post »

ಕಾವ್ಯಯಾನ

ಸಂಕ್ರಾಂತಿ ಕಾವ್ಯ ಸುಗ್ಗಿ ಹಳೆಮನೆ ಮತ್ತು ಗೋಡೆ ಗಡಿಯಾರ ವಿಭಾ ಪುರೋಹಿತ ಮೂರ್ನಾಲ್ಕು ತಲೆಮಾರಿನವರುಚಿರಪರಿಚಿತರೇ,ಅನಾದಿ…..ಅದೇ ಗೋಡೆ ಅದೇ ಜೀವಅದೇ ಭಾವ ಅದೇ ಬಡಿತನಿರ್ಲಿಪ್ತ….. ನಿನ್ನಾತ್ಮ ಸಾಂಗತ್ಯ….ಇನ್ನೂ ಬಸಿರ ಬಯಕೆ ತೀರಿಲ್ಲಹೆಣ್ಣೋ ಗಂಡೋನೋವೋ ನಲಿವೋ ಹಡಿಯುತ್ತಲಿರುವೆ !ವಿಧಿಯ ಕೈವಾಡಗಳು ನಿನ್ನಾಡಿಸುತ್ತವೆಬಿಕ್ಕಿ ನರಳಾಡಿಸುತ್ತವೆನಕ್ಕು ನಲಿಸುತ್ತವೆಹಿಂಡು ಹಿಂಡಾಗಿ ಕಷ್ಟಗಳಒಂದೊಂದಾಗಿ ಸುಖಗಳಹೆರುತ್ತ…. ಅದೆಷ್ಟುಪಾಠ ಕಲಿಸಿರುವೆ !ಸಂಯಮ ಪರೀಕ್ಷಿಸಿರುವೆ !ದಾಯಾದಿ ಬಂಧುಗಳ ಬಿರುಕುಹೆಣ್ಮಕ್ಕಳ ಅಳುಕುದೇಶದ ವಿದ್ಯಮಾನಸ್ವಾತಂತ್ರ್ಯ ಹೋರಾಟದ ಭಯಾನಕವಿಕೋಪಗಳ ವಿಪತ್ತೂ ಕಂಡಿರುವೆಹಾಹಾ….ಆದರೀಗ….ಏನೂ ಗೊತ್ತಿಲ್ಲದವರಂತೆಹೊಸತಲೆಮಾರಿನವರೆದಿರು‘ ಆಂಟಿಕ್ ಪೀಸ್ ‘ ನಂತೆ .ಹಳೇ ಟಿಕ್ ಟಿಕ್ ನಲಿಹೊಸ ಕಾಳಜಿಯೊಂದುಮಿಡಿಯುತ್ತಿದೆ.

Read Post »

ಕಾವ್ಯಯಾನ

ಕವಡೆಗಳು

ಕವಿತೆ ಕವಡೆಗಳು ವಿಭಾ ಪುರೋಹಿತ್ ಪಬ್ ಜಿ ವಿಡಿಯೋ ಗೇಮ್ ಬೇಜಾರಾಗಿಚೌಕಾಬಾರಾ ಪಗಡೆ ಅಳೆಗುಳಿಮನೆಝಾಡಿಸಿಕೊಂಡು ಮೇಲೆದ್ದಿವೆಚರಿತ್ರೆಯ ಮು‌ಷ್ಟಿಯೊಳಗಿಂದತಂದಾಣಿಪಿಲ್ಲೆ ಹಾವುಏಣಿಯಾಟ ಹುಣಸೆಬೀಜಗಳು ಕಾಶಿಯಿಂದ ತಂದ ಕವಡೆಗಳು ಕಣ್ಬಿಟ್ಟಿವೆ ಲಾಕ್ಡೌನಿನಲ್ಲಿ ! ಬೊಗಸೆಯಲ್ಲಿಟ್ಟು ಕುಲುಕಿಸಿ ಎಸೆದಾಗಬೇಕಾಗುವ ಅಂಕೆ ದೊರೆತರೆ ಅದೃಷ್ಟಅಂಗಾತ ಬಿದ್ದಕವಡೆ ಕುದುರಿಯೇಳುವ ಭಾಗ್ಯಡಬ್ಬು ಮಲಗಿದ ಕವಡೆ ನಿತಾಂತಬಾಳಭವಿತವ್ಯಕ್ಕೆ ಕವಡೆ ಸಂಖ್ಯೆ ಗಳಪಾರಾಯಣವಂತೆ ಜೋತಿಷ್ಯಾಲಯದಲ್ಲಿಸಾಲುಗಟ್ಟಿ ನಿಂತಿದ್ದಾರೆ ಕವಡೆವಾಣಿಗಾಗಿಅರ್ಧಸತ್ಯವಿದ್ದರೂ ನಂಬುವ ಅನಿವಾರ್ಯಮನದೊಳಗೆಹೂತಿಟ್ಟ ಪ್ರಶ್ನೆ ಗಳಿಗೆರಾಮಬಾಣವಂತೆ ಕವಡೆಗಳು ಅದೇನೋ ನೂರೆಂಟು ಕಗ್ಗಂಟುಲೆಕ್ಕಾಚಾರದ ಸೂತ್ರಗಳುನೌಕೆ ಓಡುವುದಕ್ಕೂ ನಿಲ್ಲುವದಕ್ಕೂಕಾರಣಿಸುವ ಲಂಗರು ಕವಡೆಉತ್ತರ ಹೇಳಬೇಕಂತೆ……ಅಂತೆ ಕಂತೆಗಳ ಉಡ್ಡಯನಪ್ಯಾಶ್ಚರೀಕರಿಸಿದ ಧೂತರಿಂದ

ಕವಡೆಗಳು Read Post »

ಕಾವ್ಯಯಾನ

ಈಗ ಅವಳು

ಕವಿತೆ ಈಗ ಅವಳು ವಾಯ್.ವ್ಹಿ.ಕಂಬಾರ ಬಣ್ಣದ ಬಟ್ಟೆಗೆ ಕಣ್ಣಾಗುವ ಅವಳುಬಿಳಿಯ ಹೊಳಪಿಗೆ – ಬಾಯಾಗುವಳುಹೊಲ , ಮನೆ ಕದನ – ಕಲಾಪಗಳಲ್ಲಿಕಥೆಯಾದವರು – ಬಿಲ್ಲಿಗೆ ಕಲ್ಲಾಗುವರು !! ದಪ್ಪ ಮೀಸೆಗಳಲ್ಲಿಬರವಸೆಯ ಕಣ್ಣಿರಿಸಿದವಳಿಗೆಸಂಕಟ ತಿಳಿಯದ ಬೆಳಕ ಕಂಡು – ಕುಬ್ಜಳಾಗುವಳು !! ಹೆಜ್ಜೆ ಹೆಜ್ಜೆಗೂ ಅನ್ನ ಅರಸುವ ಅವಳುಅವಮಾನದ ವಿಷ ತುಳಿದುಹಸಿವೆಯ ಹರಾಜಿಗೆ – ತ ಲೆಬಾಗುವಳು !! ರಕ್ತ ಸಂಭಂದಗಳು , ಸ್ನೇಹಗಳುಬಾಲ್ಯದ ಆಟಗಳು , ತೊಟ್ಟಿಲದಜೋಗುಳಗಳು – ಸುಟ್ಟುಹೋದಸುಡುಗಾಡದಲ್ಲಿ ಈಗ ಅವಳು !! ಎಲ್ಲ ಬಿಟ್ಟು ಬಂದ ಗಾಳಿಕಾಲಕ್ಕೆ ತಲೆ ಬಾಗುವ ನೆಲಛಳಿಯೊಂದಿಗೆ ಛಳಿಯಾಗಿಬಿಸಿಲಿಗೆ ಮೈಯಾದ ಗೋಡೆಗಳೊಂದಿಗೆ ಈಗ ಅವಳು !! **************************

ಈಗ ಅವಳು Read Post »

ಕಾವ್ಯಯಾನ

ಕ್ಷೌರಿಕ

ಕವಿತೆ ಕ್ಷೌರಿಕ ಮಾಲತಿ ಶಶಿಧರ್ ಪಾಪ ಕ್ಷೌರಿಕ ಕವಿಯಂತಲ್ಲಕವಿ ಬರೆದ ಸಾಲುಗಳ ತಿದ್ದಬಹುದುಬೇಡವೆನಿಸಿದರೆ ಅಳಿಸಿಬಿಡಬಹುದು ಪಾಪ ಕ್ಷೌರಿಕ ಗೋಡೆ ತುಂಬಾವಿಧ ವಿಧ ಹೇರ್ ಕಟ್ಗಳ ಚಿತ್ರಅಂಟಿಸಿ ಕೇಳಿದ ಹಾಗೆ ಕೆರೆಯಬೇಕುಒಮ್ಮೆ ಕತ್ತರಿ ಕಚಕ್ ಎಂದರೆಅಲ್ಲಿಗೇ ಮುಗಿಯಿತು ಕವಿತೆ ಬರೆವ ನನ್ನ ಬೆರಳಿಗಿಂತಲೂನನ್ನ ಕೂದಲು ಬಹಳಾ ವಿಧೇಯಿಪದಗಳು ಸಿಗದೆ ಬೆರಳು ಪರದಾಟನಡೆಸ ಬಹುದೇನೋ ಆದರೆಕೂದಲು ಎಳೆದತ್ತ ಸುಮ್ಮನೆಹೋರಡುತ್ತದೆಬಾಚಣಿಗೆಯಾಗಲಿ ಬ್ಲೆಡ್ ಆಗಲಿ ಅದಕ್ಕೆ ಪೆನ್ನಿಗೆ ಬೆರಳು ಕೊಡುವಷ್ಟುಸುಲಭವಾಗಿ ಅವನ ಕೈಗೆತಲೆ ಕೊಡುವುದಿಲ್ಲಕೊಡಲೇ ಬೇಕಾದಾಗನಡುಗುತ್ತಲೇ ಕೊಡುತ್ತೇನೆಅದೂ ಎರಡೂ ಕಂಗಳಬಿಗಿಯಾಗಿ ಮುಚ್ಚುತ್ತಾ… ******************************

ಕ್ಷೌರಿಕ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ವಾಯ್.ಜೆ.ಮಹಿಬೂಬ ಹೃದಯದಲಿ ಪ್ರೀತಿ ಅಂಕುರಿಸಿದೆ ಸಸಿಯಾಗಿಸಲು ಬಾ ಸಖಿಹದವಾಗಿ ಮನಬೆರೆಸಿ ಉದಯರಾಗದಿ ನೀರೆರೆಯಲು ಬಾಸಖಿ ಅನುಮಾನ ಸಂಶಯದ ಶೆಕೆ ಬಡಿಯದಿರಲಿ ಎಲ್ಲಿಯೂ ಇದಕೆನಂಬುಗೆ ವಿಶ್ವಾಸಗಳ ರೆಕ್ಕೆ-ಪುಕ್ಕಗಳಾಗಿ ವಿಹರಿಸಲು ಬಾ ಸಖಿ ಅನುವು-ತನುವುಗಳೆ ದಿನಮಂತ್ರಗಳಾಗಲಿ ನಮ್ಮಿಬ್ಬರ‌ ಬಾಳ್ಗೆನೀನಿರುವಾಗ ಹಂಗ್ಯಾತರದು ಸತ್ಕಾಲಕೆ ಹಿತವಾಗಲು ಬಾ ಸಖಿ ಹರಾಮಿನ ಅರಮನೆ ತೊರೆದುಬಿಡು,ಕಂಬಳಿ-ದಿನದಂಬಲಿ ಸಾಕುತಮಕೆ ಬೆಳಕು-ಅಹಂಗೆ ವಿರಾಮ,ನಾನು ಸಂಭ್ರಮಿಸಲು ಬಾಸಖಿ ‘ಅಜಾದ್’ಬಯಸುವುದೇನಿದೆ,ಬಯಕೆಯೂ ಅರಾಮಿನಲ್ಲಿದೆಸತ್ಕರಿಸಿದವನೇ ಜಗದೊಡೆಯನಿಗೆ ಕರಮುಗಿಯಲು ಬಾಸಖಿ ***********************************************************

ಗಜಲ್ Read Post »

You cannot copy content of this page

Scroll to Top