ಕಾವ್ಯಯಾನ ನಾಲ್ಕು ದಿನದ ಪಯಣ ತೇಜಾವತಿ ಹೆಚ್.ಡಿ. ಪ್ರವಾಹವೋ ಬಿರುಗಾಳಿಯೋಚಂಡಮಾರುತವೋ ಜ್ವಾಲಾಮುಖಿಯೋ ಸುನಾಮಿಯೋ… ಯಾವುದೋ ಒಂದು ವಿಕೋಪಬಂದೆರಗಲೇಬೇಕುನವನೆಲೆ ರೂಪಾಂತರವಾಗಲುಹೊಸ ಅಲೆ ಪ್ರಸಾರವಾಗಲು… ಬೇಕಾದದ್ದು ಬೇಡವಾಗಿಬೇಡವಾದದ್ದು ಬೇಕಾಗಿಕಸ ರಸವಾಗಿ, ರಸ ಕಸವಾಗಿಎಲ್ಲವೂ ತಲೆಕೆಳಾಗಾಗುವವಿಚಿತ್ರ ಸತ್ಯ-ಮಿಥ್ಯ ಪ್ರತಿಬಿಂಬಗಳ ದರ್ಶನವಾಗಲು…ಓ ಕಾಲನೇ… ವಜ್ರಕ್ಕಿಂತಲೂ ನೀನೆಷ್ಟು ಕಠೋರ.. ನಿನ್ನನುಗ್ರಹವಿದ್ದರೆಹೂವಿನ ಮೇಲಿನ ನಡಿಗೆಇಲ್ಲದಿದ್ದರೆ..ಕತ್ತಿಯ ಮೇಲಿನ ನಡಿಗೆಮುಟ್ಟಿದ್ದೆಲ್ಲಾ ಮಲ್ಲಿಗೆಯಾಗಿಸುವ ನಿನಗೆತಾಕಿದ್ದೆಲ್ಲ ನಂಜಾಗಿಸುವ ಕಲೆಯೂ ಕರಗತವಾಗಿದೆ ಬಿಡು.. ಎಂದಾದರೂ ನಿನ್ನಂತರಗವ ಅಳೆಯಲಾದೀತೇ…?ಈ ಕ್ಷಣಿಕದ ಗೊಂಬೆಗಳು..! ದಾನ ಮಾಡಿದ ಕರಗಳು ಬೇಡುವುದೆಂದರೇನು..ತನ್ನಸ್ತಿತ್ವವ ಪರರ ವಶದಲ್ಲಿಟ್ಟುನಶ್ವರದ ಬಾಳು ಬದುಕುವುದೆಂದರೇನು.. ನೂರೊಂದು ಮನೆಗಳ ಬೆಳಗಾಗಿದ್ದ ಬೆಳಕುಕತ್ತಲಕೋಣೆಯಲ್ಲಿ ಕೊಳೆಯುವುದೆಂದರೇನು…ದೃಷ್ಟಿ ಕಳೆದುಕೊಂಡ ನಯನಗಳುಎಲ್ಲಿದ್ದರೇನು… ಎಂತಿದ್ದರೇನು? ಭೂಮಿ ತಿರುಗುವುದುಕಾಲ ಉರುಳುವುದುಕಾಡು ನಾಡಾಗಿ, ನಾಡು ಕಾಡಾಗಿನೆಲ ನೀರಾಗಿ, ನೀರು ನೆಲವಾಗಿದೇಹ ಮಣ್ಣಾಗಿ, ಜೀವ ಹಾರಿಹೋಗಿ ಆತ್ಮ ಅಮರವಾಗುವುದು…. ಇದಿಷ್ಟೇ ತಾನೇ…ನಾಲ್ಕು ದಿನದ ಪಯಣ..ಇದಿಷ್ಟೇ ತಾನೇ..ಮುಕ್ತಗುಟ್ಟು… **************************