ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕರುನಾಡು (ಭೋಗಷಟ್ಪದಿ)

ಕರುನಾಡು (ಭೋಗಷಟ್ಪದಿ) ಶುಭಲಕ್ಷ್ಮಿ ಆರ್ ನಾಯಕ (ಮೂರು ಮಾತ್ರೆಯ ಗಣಗಳು) ಎನಿತು ಅಂದ ನಮ್ಮ ನಾಡುಎನಿತು ಮಧುರ ನಮ್ಮ ನುಡಿಯುವೈಭವದ ಇತಿಹಾಸದ ಚೆಲುವ ಕರುನಾಡುಕೆಚ್ಚೆದೆಯ ಕಲಿಗಳ ನಾಡುಹಚ್ಚ ಹಸಿರ ಸೊಬಗ ಬೀಡುವೀರ ಯೋಧರ ತ್ಯಾಗ ಮೆರೆದಿಹ ಕರುನಾಡು//೧// ಸಾಧು ಸಂತರು ಅವತರಿಸಿಪಾವನಗೊಳಿಸಿದರು ನಾಡಕಟ್ಟಿದರು ಅವರು ಸಮತಾಭಾವದಿ ಬೀಡಪುಣ್ಯನದಿಗಳು ಪ್ರವಹಿಸಿಪಾಪ ತಿಕ್ಕಿ ತೊಳೆದು ಧನ್ಯಮಾಡಿವೆ ನಮ್ಮೆಲ್ಲರ ಕರುನಾಡ ಬೀಡಲಿ//೨// ಮಣ್ಣ ಕಣಕಣದಲಿ ಒಲವುಗೆಲುವ ಗೇಯದಲಿ ಒಲುಮೆಯುಕನ್ನಡಿಗರ ಮನದಲಿ ಮಿಡಿದಿಹುದು ನೋಡಿರಿಮಾನ್ಯವಿರಲಿ ನಾಡು ನುಡಿಗೆಬಳಕೆಯಾಗಲಿ ಕನ್ನಡವುಆರದೆ ಉರಿಯಲಿ ಕನ್ನಡದನಾಡ ದೀಪವು//೩// ಹರಿದು ಹೋಗದಿರಲಿ ನಾಡುಮುರಿದು ಹೋಗದಿರಲಿ ಭಾಷೆಹರಡಲಿ ಎಲ್ಲೆಲ್ಲೂ ಕನ್ನಡದ ಪರಿಮಳವುಕನ್ನಡ ಉಲಿವಾಗ ಬೇಡಕೀಳರಿಮೆಯು ಕನ್ನಡಿಗರೆಮುಡಿಪಿಡೋಣ ನಾಡು ನುಡಿಯ ಸೇವೆಗೆ ಜೀವ//೪// ****************************************

ಕರುನಾಡು (ಭೋಗಷಟ್ಪದಿ) Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸಿದ್ದರಾಮ ಹೊನ್ಕಲ್ ಹೇಳಬೇಕಾದ ಮಾತೆಲ್ಲವನು ಹೇಳಿಯಾಯಿತು ಮತ್ತೇನು ಮಾಡಲಿಕೇಳಬೇಕಾದ ಮಾತೆಲ್ಲ ಮತ್ತೆ ಕೇಳಿಯಾಯಿತು ಮತ್ತೇನು ಮಾಡಲಿ ತಿಳಿಯದವರಿಗೆ ತಿಳಿಸಬಹುದು ತಿಳಿದು ಮೌನ ಆದರೇನು ಮಾಡಲಿಮನದ ಬಯಕೆ ಬಾಯಿಬಿಟ್ಟು ಕಂಗಾಲಾಯಿತು ಮತ್ತೇನು ಮಾಡಲಿ ಕಾಯ ಕಾಯಬೇಕು ನಿಜ ಆ ಕಾಯುವಿಕೆಗೆ ಕೊನೆ ಯಾವಾಗಪಿಸುಮಾತು ಬಿಸುಮಾತಾಗಿ ಆಟವಾಯಿತು ಮತ್ತೇನು ಮಾಡಲಿ ಪ್ರೀತಿಯಲಿ ಬಿದ್ದವರೆಲ್ಲ ಹುಚ್ಚರೆಂಬ ಸತ್ಯ ಇಡೀ ಜಗವು ಬಲ್ಲದುಸತ್ಯ ಹುಚ್ಚೆನಿಸಿ ಬಾಗಿಲು ಮುಚ್ಚಿಯಾಯಿತು ಮತ್ತೇನು ಮಾಡಲಿ ಹೇಳಿ ಕೇಳಿ ಬೇಸತ್ತು ಬಸವಳಿದು ಹೋಗಿಹನು ನೀ ಬಲ್ಲೆ ಸಾಕಿತರವಲ್ಲ ತಿಳಿ ನೀ ಬರೀ ಕಾಡುವದಾಯಿತು ಮತ್ತೇನು ಮಾಡಲಿ ತನ್ನ ಪಾಡಿಗಿದ್ದವನ ಸುತ್ತ ಸುಳಿದು ಹುಚ್ಚುಹಚ್ಚಿ ಕೈ ಬಿಡೋದು ನ್ಯಾಯವೆಕಷ್ಟ ಸುಖದ ನಾಲ್ಕುಮಾತು ಇಲ್ಲವಾಯಿತು ಮತ್ತೇನು ಮಾಡಲಿ ಅದಕೆ ಜಿಪುಣತನ ಬಂದರೆ ಬರಗೆಟ್ಟ ಹೊನ್ನು’ ಬದುಕಿಗೆ ಏನರ್ಥ ಸಾಕಿಮನೆ ಮನ ಇಡೀ ಜೀವ ಕಾಯುವದಾಯಿತು ಮತ್ತೇನು ಮಾಡಲಿ *********************************************

ಗಜಲ್ Read Post »

ಕಾವ್ಯಯಾನ

ಕಾವ್ಯಯಾನ

ರೊಕ್ಕದಿ ದಕ್ಕದೊಡವೆ ಅವಳು ನಿನ್ನ ಹೆತ್ತು ಹೊತ್ತವಳು ಹೆಣ್ಣುವಾತ್ಸಲ್ಯದಿ ಸಲಹಿದವಳು ಹೆಣ್ಣುಅವಳ ಮೇಲೆ ಹಸಿದ ಪಿಶಾಚಿಗಳ ಕಣ್ಣುಕಾಮದಬ್ಬರದಿ ಸಿಲುಕಿ ಆದಾಳೋ ಮಣ್ಣು ಹೆಜ್ಜೆ ಹೆಜ್ಜೆಗೂ ಸಜ್ಜಿಕೆಯನ್ನೇರಿಯಶಸ್ಸಿನ ಮುಕುಟ ಧರಿಸಿದರುಕಾಮ ಪಿಪಾಸುಗಳ ಹಸಿವಲಿನಲುಗಿಹಳು ಕಮರಿಹಳು ಬಡಪಾಯಿ ಹೆಣ್ಣ ತಿನ್ನುವಆಸೆ ಏಕೆ ಪಿಪಾಸುಗಳೇಈ ಘೋರ ತುಂಬಿದ ಕೃತ್ಯಕ್ಕೆಬೀದಿ ನಾಯಿ ಕಣ್ಣೀರಿಡುತ್ತಿದೆ ಅವಳ‌ ಹರಿದು ಸೊಕ್ಕಲ್ಲಿಮುಕ್ಕವೆಯಾಹೊಕ್ಕಳಿನ ನಂಟಿಟ್ಟು ಮುತ್ತಿಕ್ಕಿದಸಂಕುಲದವಳು, ರಕ್ಕಸನು ಹೊಕ್ಕಿದನೇನಿನ್ನ ರೊಕ್ಕದಿ ದಕ್ಕಿಸಲಾರದ ಒಡವೆಯವಳು ಅಳಿಸದಿರು ಕಣ್ಣೀರು ತರಿಸದಿರುನಿನ್ನಾಸೆಯ ಹಸಿವಲ್ಲಿ ದಹಿಸದಿರುಅವಳ ಮನಸು ನೋಯಿಸದಿರುಹಸಿವ ಹಿಂಗಿಸಿ ಉಸಿರಾಡಲು ಬಿಡು **************************************** ಚಂದ್ರು ಪಿ.ಹಾಸನ

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶ್ರೀ ಲಕ್ಷ್ಮಿ ಅದ್ಯಪಾಡಿ ನಿನ್ನ ಉಸಿರ ರಾಗಕ್ಕಾಗಿ ಹುಡುಕಾಡುತ್ತಿರುವೆನಿನ್ನ ಒಲವ ಪಿಸುನುಡಿಗಾಗಿ ಹುಡುಕಾಡುತ್ತಿರುವೆ.. ಕದ್ದು ನೋಡುವ ಸಾವಿರಾರು ಕಣ್ಣುಗಳ ನಡುವೆನಿನ್ನ ಪ್ರೇಮದ ನೋಟಕ್ಕಾಗಿ ಹುಡುಕಾಡುತ್ತಿರುವೆ.. ನನ್ನ ಕುಡಿ ನೋಟಕ್ಕೆ ಕಾದಿವೆ ನೂರು ಭ್ರಮರಗಳುಕೆನ್ನೆ ಸವರಿದ ಪುಟ್ಟ ಹೂವಿಗಾಗಿ ಹುಡುಕಾಡುತ್ತಿರುವೆ.. ಬಣ್ಣಗಳಲ್ಲಿ ಅದ್ದಿದ ಸಾವಿರ ಕುಂಚಗಳು ಕಾದಿವೆನಿನ್ನ ನೆನಪಿನ ಒಂದು ರೇಖೆಗಾಗಿ ಹುಡುಕಾಡುತ್ತಿರುವೆ ಜಗದ ಬನದೊಳು ಅರಳಿವೆ ವಿಧವಿಧವಾದ ಹೂಗಳುಒಡಲ ಕಂಪು ಸೂಸಿದ ಕಸ್ತೂರಿಗಾಗಿ ಹುಡುಕಾಡುತ್ತಿರುವೆ *****************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸಿದ್ದರಾಮ ಹೊನ್ಕಲ್ ನಿನ್ನ ನೋಟ ಬಲು ಹಿತ ನೀಡಿದೆ ನೀ ಕಾಡಿಸುತ್ತ ಕೂಡಬೇಡದಿನಗಳು ದೀರ್ಘವಾಗಿಹವು ಆ ಮಾತನೇ ನೀ ಮುತ್ತಾಗಿಸಬೇಡ ನನ್ನ ಕಣ್ಣ ರೆಪ್ಪೆಗಳು ಕಣ್ಢೀರ ಬಿಸಿಗೆ ಕಣ್ಣೀರು ಮಿಡಿದಿವೆಕಲ್ಲು ಹೃದಯವಲ್ಲ ನಿನ್ನದು ಇಷ್ಟು ಕಠೋರ ನಟನೆಬೇಡ ಬೀಸುವ ತಂಗಾಳಿ ಸೂರ್ಯಚಂದ್ರರ ಸಹಜತೆ ಬೇಡವೆಜಗಕೆ ಬಂದವರಿಗೆಲ್ಲ ಒಂದೊಂದು ಬವಣೆ ನೀ ಚಿಂತಿಸಬೇಡ ನಾನೊಂದು ತೀರ ನೀನೊಂದು ತೀರವೆಂದು ನೊಂದೆಯಲ್ಲಾಮಧ್ಯೆ ಹರಿವ ಪ್ರೇಮದ ಹರಿವು ತಿಳಿಯದೇ ನೀ ಇರಬೇಡ ಇಂದಲ್ಲಾ ನಾಳೆ ವಜ್ರಲೇಪಿತ ಕುಸುಮ ಸುಖದಿ ಅರಳಿತುಕಳವಳಿಸದಿರು ಏಲೇ ಮನವೇ ಹತಾಶದಿ ನೀ ಸೋಲಬೇಡ ಮಧುರ ಪ್ರೇಮವಿಲ್ಲದೇ ಈ ಜೀವಕೆ ಜೀವನ ಬೇಕೆ ಸಾಕಿಹೊನ್ನು’ಲಕ್ಷ ಭಾವತುಂಬಿ ಪ್ರೀತಿ ದಕ್ಕದ ಫಕೀರ ಆಗಿಸಬೇಡ **********************************

ಗಜಲ್ Read Post »

ಕಾವ್ಯಯಾನ

ಕದಳಿಯ ಅಕ್ಕ

ಕವಿತೆ ಕದಳಿಯ ಅಕ್ಕ ಜ್ಯೋತಿ ಬಳ್ಳಾರಿ ಶಿವಮೊಗ್ಗ ಜಿಲ್ಲೆಯಉಡುತಡಿಯಲಿ ಹುಟ್ಟಿತು,ಒಂದು ಕನ್ನಡದ ಕಂದಮ್ಮಅವಳಿಂದ ಜಗಕ್ಕೆಲ್ಲಆನಂದ ನೋಡಮ್ಮ. ನಿರ್ಮಲಶೆಟ್ಟಿ ಸುಮತಿದಂಪತಿಗಳ ಅಕ್ಕರೆಯ ಕಂದಮ್ಮ,ಸುರದೃಪಿ ಗುಣವಂತಹೆಮ್ಮೆಯ ಮಗಳಮ್ಮ. ಅಂದದ ಮೈಮಾಟಕ್ಕೆಕೌಶಿಕ ಮಹಾರಾಜನ ವಶವಾದಳು ಕೇಳಮ್ಮ,ಮಾತು ತಪ್ಪಿದ ರಾಜನ ದಿಕ್ಕರಿಸಿಬಿಟ್ಟಳಮ್ಮ. ಅರಮನೆಯ ಭೋಗವತೊರೆದು ಕೇಶಾಂಬರಿಯಾಗಿ ಹೋರಟು ಬಿಟ್ಟಳಮ್ಮ.ಭವ ಬಂಧನವ ತೊರೆದು ಮಲ್ಲಿಕಾರ್ಜುನನ್ನುಕಾಡು ಮೆಡುಗಳಲ್ಲಿ ಹುಡುಕಿದಳಮ್ಮ. ಹಾಡುವ ಕೋಗಿಲೆಗೆಹಕ್ಕಿ ಪಕ್ಷಿಗಳಿಗೆ ಕಂಡಿರಾನನ್ನ ಪತಿನೆಂದು ಕೇಳಿದಳಮ್ಮ. ಕಲ್ಯಾಣದ ಅನುಭವ ಮಂಟಪದಲಿಅಲ್ಲಮಪ್ರಭುವಿನ ಪರೀಕ್ಷೆ ಗೆದ್ದಳಮ್ಮಜ್ಞಾನದ ಗಣಿಯಾಗಿಮಹಾಮನೆಯ ಅಕ್ಕ ಆದಳು ನೋಡಮ್ಮ. ಬಸವಣ್ಣನವರ ಜೊತೆಗೂಡಿಕಟ್ಟಿದಳು ಸಮಾನತೆಯ ಕಲ್ಯಾಣ ನಾಡಮ್ಮ,ವಚನ ಚಳುವಳಿಯಲಿಭಾಗಿಯಾದ ಕನ್ನಡಮ್ಮನಸ್ವಾಭಿಮಾನಿ ಮಗಳಮ್ಮ. ಯೋಗಾಂಗ ತ್ರಿವಿಧಿ ,ನೂರಾರು ವಚನಗಳನ್ನುಚೆನ್ನಮಲ್ಲಿಕಾರ್ಜುನ ಎಂಬಅಂಕಿತನಾಮದಿ ಬರೆದಳಮ್ಮ ಕನ್ನಡದ ಮೊದಲ ಕವಯತ್ರಿಯಾದಳಮ್ಮಅವಳೆ ಅಕ್ಕಮಹಾದೇವಿಯಮ್ಮಜಗದಲಿ ಹುಟ್ಟಿದ ಬಳಿಕ‌ಸ್ತುತಿ ನಿಂದನೆ ಬಂದರೆ ಸಮಾಧಾನದಿಂದಿರಬೇಕೆಂದುಜಗಕೆ ಹೇಳಿದಳಮ್ಮ ಶ್ರೀಶೈಲದ ಕದಳಿಯಲಿ,ನಿಜ ಪತಿ ಮಲ್ಲಿಕಾರ್ಜುನನಲ್ಲಿಕೊನೆಗೆ ಐಕ್ಯಳಾದಳಮ್ಮ*****************************************

ಕದಳಿಯ ಅಕ್ಕ Read Post »

ಕಾವ್ಯಯಾನ

ನೀ ಬಂದ ಘಳಿಗೆ

ಕವಿತೆ ನೀ ಬಂದ ಘಳಿಗೆ ಅನ್ನಪೂರ್ಣಾ ಬೆಜಪ್ಪೆ ಮಲಗು ಮಲಗೆನ್ನ ಕಂದಮಲಗೆನ್ನ ಹೆಗಲಿನಲಿಕಾಯುವೆನು ಅನವರತ ಭಯಬೇಡ ಮಗುವೆಸವಿಯುತಿರು ಪ್ರತಿ ಕ್ಷಣವನಲುಗದೆಯೆ ಕೊರಗದೆಯೆಬಾಳ ಹಾದಿಯಲೆನಗೆ ಬಲವದುವು ನಿನ್ನ ನಗುವೆ ರವಿಯು ಉದಿಸುವ ವೇಳೆನಲಿವ ಇಳೆಯದೆ ಸುಖವುನೀ ನನ್ನ ಮಡಿಲ ತುಂಬುತಲಿ ಬಂದ ಘಳಿಗೆಎಳೆಯಬೆರಳಿನ ಸ್ಪರ್ಶದಲಿನೂರು ತಂತಿಯು ಮಿಡಿದುಎದೆಯ ನೋವೆಲ್ಲ ಮರೆಯಾದಂತೆ ಮರೆಗೆ ಮುಪ್ಪು ಕಾಡುವವರೆಗೆತಪ್ಪು ಒಪ್ಪುಗಳ ಅರುಹಿತೆಪ್ಪವಾಗುತ ಬರುವೆ ಬಾಳ ಯಾನದಲ್ಲಿಕಪ್ಪು ಮೋಡವು ಸರಿದುತುಪ್ಪದಂತೆಯೆ ಘಮಿಸಿಒಪ್ಪವಾಗಿರಲಿ ಬದುಕು ಸವಿ ನಗುವ ಚೆಲ್ಲಿ **********************

ನೀ ಬಂದ ಘಳಿಗೆ Read Post »

ಕಾವ್ಯಯಾನ

ತಲ ಷಟ್ಪದಿಯಲ್ಲೊಂದು ಶಿಶುಗೀತೆ

ಪುಟ್ಟನ ಮನೆ ತೇಜಾವತಿ ಹೆಚ್.ಡಿ. ಒಮ್ಮೆ ಪುಟ್ಟಅಮ್ಮನೊಡನೆಸಾಗರ ನೋಡಲೋದರಾಶಿ ರಾಶಿಉಸುಕು ಕಂಡುಕುಣಿದು ಕುಣಿದು ಹಿಗ್ಗಿದ || ಪುಟ್ಟ ನುಣುಪುಉಸುಕಿನಲ್ಲಿಚಂದ ಮನೆಯ ಕಟ್ಟಿದಅಲೆಯು ಬಂದುಕೊಚ್ಚಿ ಹೊಯ್ದುಅಮ್ಮಾ! ಎಂದು ಕೂಗಿದ || ಅಮ್ಮ ಬಂದುಹೇಳು ಕಂದಏಕೆ ಅಳುವೆ ಎನ್ನಲುನೋವಿನಿಂದಉರುಳಿ ಬಿದ್ದಮನೆಯ ತೋರಿ ಹಲುಬಿದ || ಕೇಳು ಮಗನೆಏಕೆ ಅಳುವೆಮರಳ ಮನೆಯು ಕ್ಷಣಿಕವುನೀನು ಕಟ್ಟುಮನದ ಮನೆಯಆತ್ಮ ಛಲವು ಜೊತೆಗಿದೆ || ಒಡನೆ ಪುಟ್ಟಎದ್ದು ನಿಂತುಅಮ್ಮನಪ್ಪಿ ಹೇಳಿದಬಿಡೆನು ನಾನುನಿನ್ನ ಮಾತಒಪ್ಪಿಕೊಂಡೆ ಎಂದನು || ಮಗನ ನುಡಿಯಕೇಳಿ ಅಮ್ಮಪ್ರೀತಿ ಧಾರೆ ಎರೆದಳುಮಿಂದ ಪುಟ್ಟಮಡಿಲ ಸುಖದಿಹೊಸತು ಕನಸ ಕಂಡನು || ಊರಿನಲ್ಲಿಗೆಳೆಯರೊಡನೆಜೀವ ಭಾವ ಹುಡುಕಿದತಂದು ಎಲ್ಲಕೂಡಿ ಕಳೆದುಮನದ ಮನೆಯ ಕಟ್ಟಿದ || ಅಮ್ಮ ನೀನುಬಂದು ನೋಡುಎಂದು ಮುದದಿ ಓಡಿದನೋಡಿ ಅವಳುಶ್ರಮದ ಫಲವುದೊರೆವುದೆಂದು ನುಡಿದಳು || ಅಂದಿನಿಂದಪುಟ್ಟ ತಾನುಕೋಟಿ ಕನಸ ಕಂಡನುಬಿಡದೆ ಹಿಡಿದುತನ್ನ ಛಲವದೊಡ್ಡ ಜಾಣನಾದನು || *****************************

ತಲ ಷಟ್ಪದಿಯಲ್ಲೊಂದು ಶಿಶುಗೀತೆ Read Post »

ಕಾವ್ಯಯಾನ

ಗಜಲ್

ಗಜಲ್ ಕೆ.ಸುನಂದಾ ನಿನ್ನ ಕಂಡ ಕ್ಷಣದಿಂದ ಆನಂದದ ಭಾಷ್ಪಗಳು ಸುರಿಯುತಿದೆ ಗೆಳೆಯಆಡಿದ ಮಾತುಗಳೆಲ್ಲ ಮಧುರ ಸಂಗೀತದಂತೆ ಸೆಳೆಯುತಿದೆ ಗೆಳೆಯ ಅದೆಷ್ಟೋ ವರ್ಷಗಳಿಂದ ಕದಲದೆ ಕಾಯುತ್ತಿರುವೆ ನೀನು ಬರುವೆ ಎಂದುವಸಂತನ ಆಗಮನದ ಆನಂದವಿಂದು ನಮ್ಮಲಿ ಉಲಿಯುತಿದೆ ಗೆಳೆಯ ಮೌನವೆ ಎನ್ನ ಬದುಕೆಂದು ದೂಡುತ್ತಲಿದ್ದೆ ಕಹಿಯಾದ ಕ್ಷಣಗಳನ್ನುಬರಡಾದ ಭೂವಿಗೆ ವರ್ಷಧಾರೆ ಬಂದಂತೆ ಹರ್ಷ ಮೆರೆಯುತಿದೆ ಗೆಳೆಯ ಪವಿತ್ರ ಪ್ರೇಮಕೆ ಆತಂಕಗಳು ಹೆಚ್ಚು ಕೊನೆಗೆ ಜಯ ಸಿಕ್ಕೇಸಿಗುವುದುಅಂತರಂಗದ ಖುಷಿಗೆ ಅಂತರಾತ್ಮದ ನಂದಾದೀಪ ಉರಿಯುತಿದೆ ಗೆಳಯ ಸರ್ವಸ್ವವೂ ನೀನೆ ಎಂದು ನಂಬಿದ್ದ “ನಂದೆ”ಗೆ ಮೋಸ ಆಗದುವಿಶ್ವಾಸಕ್ಕೆ ಇನ್ನೊಂದು ಹೆಸರೇ ನೀನು ಸಂತಸ ಹರಿಯುತಿದೆ ಗೆಳೆಯ *************************************

ಗಜಲ್ Read Post »

ಕಾವ್ಯಯಾನ

ಬಂಡಾರ ಬಳೆದ ಹಣಿ

ಕವಿತೆ ಬಂಡಾರ ಬಳೆದ ಹಣಿ ಡಾ.ಸುಜಾತಾ ಸಿ. ಬಂಡಾರ ಬಳೆದ ಹಣಿಬಾಯಿತುಂಬ ಎಲೆ ಅಡಿಕೆಜೋತು ಬಿದ್ದ ಗುಳಿ ಕೆನ್ಯೆಜಿಡ್ಡು ಗಟ್ಟಿದ ಜಟಾಧರಿಕೈ ತುಂಬಾ ಹಸಿರ ಬಳಿಎದೆ ತುಂಬಾ ಕವಡೆ ಸರಮೈ ತುಂಬಾ ಹಸಿರುಟ್ಟುಪಡಲಗಿ ಹಿಡಿದುಓಣಿ ಓಣಿ ತಿರುಗುವಳುಜೋಗತಿ ಎಂದು ಹೆಸರಿಟ್ಟುಕೂಗುವರೆಲ್ಲರೂಕತ್ತಲೆಯ ಬದುಕಲ್ಲಿಸದಾ ಬುಡ್ಡಿ ಚಿಮಣದಬೆಳಕಾಗಿಸಿ ಹಂಬಲಿಸಿಸೂರ್ಯನ ಬೆಳಕಿಗೆಜೋಗಕ್ಕೆ ಜೊಗತಿಊಧೋ ಉಧೋ ಎಂದುಹೋರಟಳು ಮಕ್ಕಳ ಸಲುವಲೆಂದುಕಂಡ ಕಣ್ಣು ಉರಿ ಕೆಂಡವಾಗಿಗೈಯ್ಯಾಳಿ ಎಂದುಕೊಟ್ಟುಬಿಟ್ಟರು ಪಟ್ಟವಒಣ ರೊಟ್ಟಿ ಜೊಳಕೆಕೈ ಚಾಚಿ ಜೋಳಿಗೆ ಬಾಯಿತೆರೆದಾಗ ಮೂಗು ಮುರಿಯುತ್ತಲೇಒಳಹೋದ ಹೆಣ್ಣುವಟಗುಟ್ಟಿ ತಂದಾಕಿದಹಳಸಲು ಜೊಳಿಗೆ ಬಟ್ಟೆಅವಳ ಅಂಗಳದ ತುಂಬೆಲ್ಲಹನಿಯ ರಂಗವಲ್ಲಿ ಚೆಲ್ಲಿಮುಂದೆ ನಡೆದಾಗಬೊಗಸೆಯೊಡ್ಡಿ ನೀರುಕುಡಿದು ದಾಹ ತೀರದಿರಲುಮುಂದಿನ ಮನೆಯ ಪಯಣಒಂದು ಕಾಸು ಎಸೆದುಒಳ ಹೊದ ತಾಯಿದುರ್ಗುಟ್ಟಿ ನೊಡಿದರುಹರಸಿ ಮುಗುಳು ನಗೆ ನಕ್ಕುದಾರಿ ಸಾಗಿಸಿ ಜನಸಂದಣಿಕಡೆಗೆ ಕಾಲ ಎಳೆಯುತ್ತಾವಿಶ್ರಮಿಸಲು‌ ಬೇವಿನ ಮರದಆಶ್ರಯ ಪಡೆದು ಕುಳಿತಿರಲುಬಡಕಲು ದೇಹದಮುಖ ಬಾಡಿದ ನನ್ನಂತೆಇರುವ ಹಸಿದ ಹೊಟ್ಟೆಗೆಅನ್ನ ಕೇಳಿರಲುಜೊಳಿಗೆ ಒಳಗಡೆಒಣ ರೊಟ್ಟಿ ಕುಟುಕಲುಒಡಲ ಹಸಿವಿಗೆ ಆಸರೆಯಾ ಮಾಡಿಎದ್ದು ನಡೆದಳುಬೇವಿನ ಎಸಳುಬಿಸಿಲೊದ್ದು ತಣ್ಣಗಿರಲಿನಿನ್ನ ಕುಡಿ ಬಳ್ಳಿ ಎಂದುಹರಸಿದಂತಾಗಿಮನೆಯ ಕಡೆಗೆ ಹೆಜ್ಜೆ ಇಡಲುಗುಡಿಸಲ ತುಂಬೆಲ್ಲಾ ಕಣ್ಣಾಗಿಕಾವಲಾಗಿ ಕಾಯತಲಿರುವಚಿಕ್ಕಮಕ್ಕಳು ಬಂದುಎದೆಗವಚಿ ಕೊಂಡಾಗಬಿಸಿಲ ಝಳಕೊಒಳ ಬೆಗುದಿಗೊಒತ್ತರಿಸಿ ಬಂದ ಕಣ್ಣ ಹನಿಯಉಪ್ಪುಂಡು ಬಿಕ್ಕಿ ಬಿಕ್ಕಿಅತ್ತಾಗ ಸಂಜೆಯ ಕಿರಣಮುಸುಕ್ಕೊದ್ದು ಮಲಗಿದಾಗಗೋಧುಳಿ ಕೆಮ್ಮಣ್ಣುಮುಖ ಮೊತಿ ಮುಚ್ಚಿಅಳುವೆಲ್ಲ ನುಂಗಿಮತ್ತೇ ಹಣಿಗೆ ಸಿಂಗರಿಸಿದಳುಬಂಡಾರವ ಬಳಿದ ಬಂಗಾರದ ತಾಯಿ

ಬಂಡಾರ ಬಳೆದ ಹಣಿ Read Post »

You cannot copy content of this page

Scroll to Top